id
stringlengths
3
6
url
stringlengths
33
779
title
stringlengths
1
95
text
stringlengths
3
190k
802
https://kn.wikipedia.org/wiki/%E0%B2%B6%E0%B2%BF%E0%B2%B5%E0%B2%AE%E0%B3%8A%E0%B2%97%E0%B3%8D%E0%B2%97
ಶಿವಮೊಗ್ಗ
ಶಿವಮೊಗ್ಗ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನಗರ (ಸಂಪರ್ಕ : ೧೩.೫೬ ಉ /೭೫.೩೮ ಪೂ). ಇದು ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದಿಂದ ೨೬೬ ಕಿ.ಮೀ. ದೂರದಲ್ಲಿದೆ. ಶಿವಮೊಗ್ಗ ಮಹಾನಗರವು ಈ ಜಿಲ್ಲೆಯ ರಾಜಧಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ. ಸಹ್ಯಾದ್ರಿ ಪರ್ವತಶ್ರೇಣಿ ಮತ್ತು ಅಲ್ಲಿ ಉಗಮಗೊಳ್ಳುವ ನದಿ-ಉಪನದಿಗಳು ಶಿವಮೊಗ್ಗಕ್ಕೆ ಯಥೇಚ್ಛ ನೈಸರ್ಗಿಕ ಸೌಂದರ್ಯವನ್ನು ತಂದುಕೊಟ್ಟಿವೆ. ಶಿವಮೊಗ್ಗದಿಂದ ೧೧೩ ಕಿಮೀ ದೂರದಲ್ಲಿರುವ ಜಗತ್ಪ್ರಸಿದ್ಧ ಜೋಗದ ಜಲಪಾತ ಪ್ರಕೃತಿಯ ಒಂದು ಅಪೂರ್ವ ದೃಶ್ಯ. ಇಲ್ಲಿ ಶರಾವತಿ ನದಿ ೨೩೫ ಮೀ ಎತ್ತರದಿಂದ ಸುಮನೋಹರವಾಗಿ ಧುಮುಕುತ್ತದೆ. ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ವಿಭಿನ್ನ ಪ್ರವಾಹಗಳಾಗಿ ಧುಮುಕುವ ಶರಾವತಿ ಏಷ್ಯದ ಅತಿ ಎತ್ತರದ ಜಲಪಾತವನ್ನು ನಿರ್ಮಿಸಿದೆ. ಮಳೆಗಾಲದ ಸಮಯದಲ್ಲಿ ಕಾಮನ ಬಿಲ್ಲುಗಳನ್ನು ನಿರ್ಮಿಸಿಕೊಂಡು ಅತ್ಯದ್ಭುತ ದೃಶ್ಯವನ್ನು ಜಲಪಾತ ಪ್ರದರ್ಶಿಸುತ್ತದೆ. ತುಂಗಭದ್ರಾ, ಶರಾವತಿ, ಕುಮುದ್ವತಿ ಮತ್ತು ಇತರ ನದಿಗಳಿಂದ ಜಲಸರಬರಾಜಿನ ಸೌಕರ್ಯವುಳ್ಳ ಶಿವಮೊಗ್ಗ ಜಿಲ್ಲೆ ಕರ್ನಾಟಕದ ಅನ್ನದ ಬಟ್ಟಲು ಎನ್ನಿಸಿಕೊಂಡಿದೆ. ಚರಿತ್ರೆ ಶಿವಮೊಗ್ಗ ಎಂಬ ಹೆಸರು 'ಶಿವ-ಮುಖ' ಎಂಬ ಪದಪುಂಜದಿಂದ ಬಂದದ್ದು. ಇನ್ನೊಂದು ವ್ಯುತ್ಪತ್ತಿಯಂತೆ ಇದು 'ಸಿಹಿ-ಮೊಗೆ' (ಸಿಹಿಯಾದ ಮೊಗ್ಗು) ಎಂದಿದ್ದು ಅದು 'ಶಿವಮೊಗ್ಗ'ವಾಗಿ ಮಾರ್ಪಾಟುಹೊಂದಿದೆ.ಈ ಪ್ರದೇಶವು ಕ್ರಿ.ಪೂ. ೩ನೇ ಶತಮಾನದಲ್ಲಿ ಸಾಮ್ರಾಟ್ ಅಶೋಕನ ಮೌರ್ಯ ಸಾಮ್ರಾಜ್ಯದ ದಕ್ಷಿಣದ ತುದಿಯಾಗಿದ್ದಿತು. ಮುಂದಿನ ಶತಮಾನಗಳಲ್ಲಿ ಅನೇಕ ರಾಜಮನೆತನಗಳ ಆಳ್ವಿಕೆಯಲ್ಲಿ ಈ ಪ್ರದೇಶ ಇದ್ದಿತು: ೪ನೇ ಶತಮಾನದಲ್ಲಿ ಕದಂಬರು, ೬ನೇ ಶತಮಾನದಲ್ಲಿ ಚಾಲುಕ್ಯರು ಮತ್ತು ಅವರ ಸಾಮಂತರಾದ ಗಂಗರು, ೮ನೇ ಶತಮಾನದಲ್ಲಿ ರಾಷ್ಟ್ರಕೂಟರು, ೧೧ನೇಯದರಲ್ಲಿ ಹೊಯ್ಸಳರು ಮತ್ತು ೧೫ನೇ ಶತಮಾನದಲ್ಲಿ ವಿಜಯನಗರದ ಅರಸರು ಈ ಪ್ರದೇಶವನ್ನು ಆಳಿದೆ ರಾಜಮನೆತನಗಳಲ್ಲಿ ಪ್ರಮುಖರು. ಶಿವಮೊಗ್ಗ ನಗರಕ್ಕೆ ಸ್ವತಂತ್ರ ವ್ಯಕ್ತಿತ್ವ ಬಂದದ್ದು ೧೬ನೇ ಶತಮಾನದ ಕೆಳದಿ ನಾಯಕರ ಆಳ್ವಿಕೆಯಲ್ಲಿ. ೧೭ನೇ ಶತಮಾನದ ನಂತರ ಭಾರತ ಸ್ವಾತಂತ್ರ್ಯದ ವರೆಗೂ ಶಿವಮೊಗ್ಗ ಮೈಸೂರು ಸಂಸ್ಥಾನದ ಭಾಗವಾಗಿತ್ತು. ಪ್ರವಾಸೀ ತಾಣಗಳು ಜೋಗದ ಜಲಪಾತ ಚಂದ್ರಗುತ್ತಿ "ಶ್ರೀ ರೇಣುಕಾಂಬ ದೇವಸ್ಥಾನ" ಮತ್ತು ಕೋಟೆ ​​ ೧೨ನೇ ಶತಮಾನದ ಲಕ್ಷ್ಮೀ ನರಸಿಂಹ ಸ್ವಾಮೀ ದೇವಸ್ಥಾನ, ಭದ್ರಾವತಿ ಲಿಂಗನಮಕ್ಕಿ ಅಣೆಕಟ್ಟು ಒನಕೆ-ಅಬ್ಬೆ ಜಲಪಾತ ಭದ್ರಾ ನದಿ ಯೋಜನೆ, ಲಕ್ಕವಳ್ಳಿ ತು೦ಗಾ ನದಿ ಯೋಜನೆ, ಗಾಜನೂರು ಅಣೆಕಟ್ಟು ಆಗುಂಬೆ ಮಂಡಗದ್ದೆ ಪಕ್ಷಿದಾಮ. ಅ೦ಬುತೀರ್ಥ, ಶರಾವತಿಯ ಉಗಮ ಸ್ಥಾನ ಕು೦ದಾದ್ರಿ ಬೆಟ್ಟ ಕುಪ್ಪಳ್ಳಿಯ ಕವಿಶೈಲ ಕೋಟೆ ಶ್ರೀ ಸೀತಾರಾಮಾ೦ಜನೇಯ ಸ್ವಾಮಿ ದೇವಸ್ಥಾನ, ಶಿವಮೊಗ್ಗ ಕೂಡ್ಲಿ - ತುಂಗಾ ಮತ್ತು ಭದ್ರಾ ನದಿಗಳ ಸಂಗಮ ಆಗುವ ಸ್ಠಳ ಹಿಡ್ಲುಮನೆ ಜಲಪಾತ (ನಿಟ್ಟೂರು) ದಬ್ಬೆ ಜಲಪಾತ ಚೀಲನೂರು ಗ್ರಾಮದ ಜೋಗದ ಜಲಪಾತ ಕೊಡಚಾದ್ರಿ ಬೆಟ್ಟ ಶಿವಪ್ಪನಾಯಕನ ಕೋಟೆ (ಬಿದನೂರು ನಗರ) ಸಿಗಂದೂರು ತಾವರೆ ಕೊಪ್ಪದ ಸಿಂಹ ಧಾಮ ಚೀಲನೂರು ಸೊರಬ ತಾಲ್ಲೂಕು ಸೊರಬ ತಾಲ್ಲೂಕಿನಲ್ಲಿರುವ ಗುಡವಿ ಪಕ್ಷಿಧಾಮ (ಕರ್ನಾಟಕದ ೨ನೇ ಅತಿದೊಡ್ಡ ಪಕ್ಷಿಧಾಮ) ಕವಲೇದುರ್ಗ ಕೋಟೆ ಕೆಳದಿ ಕೋಟೆ ಸಕ್ರೇಬೈಲು ಬಿಡಾರ ಆನೆಗಳ ಬಿಡಾರ ಕೊಡಚಾದ್ರಿ ಬೆಟ್ಟ ವರದಹಳ್ಳಿ ಶ್ರೀಧರ ಆಶ್ರಮ, ಶ್ರೀ ದುರ್ಗಾಂಬಾ ದೇವಾಲಯ ವಿಮಾನ ನಿಲ್ದಾಣ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ೨೦೧೧ರಲ್ಲಿ ಪ್ರಾರಂಭವಾಯಿತು. ಗುತ್ತಿಗೆದಾರರು ಮತ್ತು ಪಾಲುದಾರರ ಜೊತೆ ಅಭಿಪ್ರಾಯಭೇದ ತಲೆದೋರಿ ಕೆಲಸವು ೨೦೧೫ರಲ್ಲಿ ನಿಂತುಹೋಯಿತು. ೨೦೨೦ರಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಕಾಮಗಾರಿ ಆರಂಭಕ್ಕೆ ಅನುಮೋದನೆ ನೀಡಿದರು. ೨೮ ಫೆಬ್ರವರಿ ೨೦೨೩ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಂಡಿತು. ಕುವೆಂಪು ವಿಶ್ವವಿದ್ಯಾನಿಲಯ ಕುವೆಂಪು ವಿಶ್ವವಿದ್ಯಾನಿಲಯವು ಶಿವಮೊಗ್ಗದಿ೦ದ ೨೭ ಕಿ.ಮಿ, ಶಿವಮೊಗ್ಗದಿಂದ ಭದ್ರಾ ಅಣೆಕಟ್ಟೈಗೆ (ಬಿ.ಆರ್.ಪಿ) ಗೆ ಹೋಗುವ ಮಾರ್ಗದಲ್ಲಿ ಶಂಕರ ಘಟ್ಟ ದಲ್ಲಿದೆ. ಶಿವಮೊಗ್ಗ ಜಿಲ್ಲೆಯ ಪ್ರಸಿಧ್ಹ ಸಾಹಿತಿ ಕೆ. ವಿ. ಪುಟ್ಟಪ್ಪ (ಕುವೆಂಪು) ರವರ ಸ್ಮರಣಾರ್ಥ್ಹ ವಾಗಿ ಈ ವಿಶ್ವ ವಿದ್ಯಾನಿಲಯಕ್ಕೆ ಅವರ ಹೆಸರನ್ನು ಇಡಲಾಗಿದೆ. ಗಿರಿ-ಶಿಖರಗಳು ಆಗುಂಬೆ, ಸೂರ್ಯಾಸ್ತಕ್ಕೆ ವಿಶ್ವಪ್ರಸಿದ್ದ ಕೊಡಚಾದ್ರಿ ಕುಂದಾದ್ರಿ ಬೆಟ್ಟ. ~ಜೈನ ಕ್ಷೇತ್ರ ಬರೆಕಲ್ ಬತೆರಿ ನಿಶಾನೆ ಗುಡ್ಡ ಹೆದ್ದಾರಿಖಾನ್ ಮೊಳಕಾಲ್ಮುರಿ ಗುಡ್ಡ ಜೊಗಿ ಗುಡ್ಡ ಮುಪ್ಪಾನೆ ನದಿಗಳು ತುಂಗಾ ಭದ್ರಾ ಶರಾವತಿ ಕುಮುದ್ವತಿ ವೇದಾವತಿ ವರದ ನದಿ ಕುಶಾವತಿ ದ೦ಡಾವತಿ ನದಿ ಮಾಲತಿ ಸೀತಾ ಚರಿತ್ರೆ ಮತ್ತು ಧರ್ಮ ಕೆಳದಿ-ಇಕ್ಕೇರಿ, ಕೆಳದಿ ನಾಯಕರ ರಾಜಧಾನಿಗಳು. ಸಾಗರ ತಾಲ್ಲೂಕು ನಗರ, ಬಿದನೂರು ಸಂಸ್ಥಾನದ ರಾಜಧಾನಿ ಬಳ್ಳಿಗಾವಿಯ ಕೇದಾರೇಶ್ವರ ದೇವಾಲಯ ಶಿವಪ್ಪ ನಾಯಕನ ಅರಮನೆ ಸೇಕ್ರೆಡ್ ಹಾರ್ಟ್ ಚರ್ಚ್, ಭಾರತದಲ್ಲಿ ಎರಡನೆ ಅತಿ ದೊಡ್ಡ ಚರ್ಚ್ ಕವಲೇದುರ್ಗದ ಕೋಟೆ, ಕೆಳದಿ ಸಂಸ್ಥಾನದ ರಾಜಧಾನಿ. ಈಗ ಕೋಟೆಯ ಪಳಯುಳಿಕೆ ಮಾತ್ರ ಇದೆ. ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟಬಸರವಾನಿ ಮತ್ತು ಮರಹಳ್ಳಿ ಗ್ರಾಮಗಳಲ್ಲಿ ಜೈನ ಸಂಪ್ರದಾಯದ ಪಳಿಯುಳಿಕೆ ಇವೆ. ಹೊಸನಗರ ತಾಲ್ಲೂಕಿನ ಹುಂಚ ಗ್ರಾಮದಲ್ಲಿ ಜೈನ ಸಂಪ್ರದಾಯದ ಮಠ ಮತ್ತು ಪದ್ಮಾವತಿ ದೇವಿಯ ದೇವಸ್ಥಾನವಿದೆ ಹಣಗೇರೆಕಟ್ಟೆ ಹಿಂದು ಮುಸ್ಲಿಂ ಧರ್ಮಗಳ ಪವಿತ್ರ ಸ್ಥಳವಾಗಿದೆ. ನಾಡಕಲಸಿ ಸಾಗರ ತಾಲ್ಲೂಕು; ಪ್ರಾಚೀನ ದೇವಾಲಯ ಉರುಗನಹಳ್ಳಿ- ಸೊರಬ ತಾಲ್ಲೂಕು - ಶಿವಮೊಗ್ಗ ಜಿಲ್ಲಾ, ಹಿಂದೂ ಮುಸ್ಲಿಂ ಭಾವೈಕ್ಯತೆಯ ಕೇಂದ್ರ ತವನಂದಿ- ಸೊರಬ ತಾಲ್ಲೂಕು - ಕದಂಬರ ಕಾಲದ ಕೋಟೆ ಮೃಗವಧೆ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ,ತೀರ್ಥಹಳ್ಳಿ ಬಳಿ. ಶ್ರೀರಾಮನು ಚಿನ್ನದ ಜಿಂಕೆಯ ರೂಪದಲ್ಲಿ ಬಂದ ಮಾರೀಚನನ್ನು ವಧೆ ಮಾಡಿದ ಸ್ಥಳ. ವನ್ಯಜೀವಿ ತಾವರೆಕೊಪ್ಪ, ಹುಲಿ ಮತ್ತು ಸಿಂಹಧಾಮ ಸಕ್ಕರೆಬೈಲು, ಆನೆ ತರಬೇತಿ ಶಿಬಿರ ಮಂಡಗದ್ದೆ ಪಕ್ಷಿಧಾಮ, ಕುಕ್ಕನ ಗುಡ್ಡಾ, ಗುಡವಿ ಸೊರಬ ತಾಲ್ಲೂಕಿನ ಚೀಲನೂರು ಕಾಡು ನವಿಲುಗಳ ವಾಸಸ್ಥಾನ ಐತಿಹಾಸಿಕ ವ್ಯಕ್ತಿಗಳು ಕೆಳದಿಯ ಚೆನ್ನಮ್ಮಾಜಿ ಅಲ್ಲಮಪ್ರಭು ದೇವರು ಕೆಳದಿ ಶಿವಪ್ಪ ನಾಯಕ ಅಕ್ಕಮಹಾದೇವಿ ಪ್ರಮುಖ ವ್ಯಕ್ತಿಗಳು ರಾಷ್ಟ್ರಕವಿ ಕುವೆಂಪು, ಜ್ಞಾನಪೀಠ ಪ್ರಶಸ್ತಿ ವಿಜೇತ ಕವಿ ಮತ್ತು ಲೇಖಕ. ಡಾ.ಎಸ್.ಆರ್. ರಾವ್ (ಶಿಕಾರಿಪುರ ರಂಗನಾಥ ರಾವ್) ಭಾರತದ ಹೆಸರಾಂತ ಪ್ರಾಚ್ಯವಸ್ತುತಜ್ಞ ಯು ಆರ್ ಅನಂತಮೂರ್ತಿ, ಕನ್ನಡ ಲೇಖಕರು ಹಾಗು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಪಿ.ಲಂಕೇಶ್, ಲೇಖಕ-ಪತ್ರಕರ್ತರು ನಾ. ಡಿಸೋಜ, ಸಾಹಿತಿ ಎಮ್.ಕೆ. ಇ೦ದಿರ, ಕಾದ೦ಬರಿಕಾರ್ತಿ ಕೆ.ವಿ.ಸುಬ್ಬಣ್ಣ, ಸಾಹಿತಿ ಮತ್ತು ನಾಟಕಕಾರ ಜಿ. ಎಸ್. ಶಿವರುದ್ರಪ್ಪ, ಕವಿ ಎನ್ ಎಸ್ ಲಕ್ಷ್ಮಿನಾರಾಯಣ ಭಟ್ಟ, ಕವಿ ಗಿರೀಶ್ ಕಾಸರವಳ್ಳಿ, ರಾಷ್ಟ್ರಪ್ರಶಸ್ತಿ ವಿಜೇತ ಸಿನೆಮಾ ನಿರ್ದೇಶಕ ಡಾ.ಟಿ.ಎಂ.ಶಿವಾನಂದಯ್ಯ ಹಿರಿಯ ಆಯುರ್ವೇದ ವೈದ್ಯರು ಸುದೀಪ್, ಚಲನಚಿತ್ರ ನಟ ತಾಲ್ಲೂಕುಗಳು ಜನಸಂಖ್ಯೆ ೨೦೧೧ರ ಜನಗಣತಿಯ ಪ್ರಕಾರ ಉಲ್ಲೇಖಗಳು ಇದನ್ನೂ ನೋಡಿ ಶಿವಮೊಗ್ಗ (ಲೋಕ ಸಭೆ ಚುನಾವಣಾ ಕ್ಷೇತ್ರ) ಹೊರಗಿನ ಸಂಪರ್ಕಗಳು ಶಿವಮೊಗ್ಗ ಗ್ಲೋರಿ ಶಿವಮೊಗ್ಗ ಮಹಾನಗರಪಾಲಿಕೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಶಿವಮೊಗ್ಗದ ಬಗ್ಗೆ ಮಾಹಿತಿ ಶಿವಮೊಗ್ಗ ಜಿಲ್ಲೆಯ ನಕ್ಷೆ ಕರ್ನಾಟಕದ ಪ್ರಮುಖ ಸ್ಥಳಗಳು ಕರ್ನಾಟಕದ ಜಿಲ್ಲೆಗಳು
803
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4
ಭಾರತ
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ. ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು, ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ ಹಾಗೂ ಭೂತಾನ, ಪೂರ್ವದಲ್ಲಿ ಮಯನ್ಮಾರ್ ಹಾಗೂ ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ ಶ್ರೀಲಂಕಾ, ಮಾಲ್ಡೀವ್ಸ್ ನಂತಹ ದ್ವೀಪ ರಾಷ್ಟ್ರಗಳಿಗೆ ಹತ್ತಿರವಾಗಿದೆ. ಕೊಳ್ಳುವ ಶಕ್ತಿಯ ಮೇರೆಗೆ, ಪ್ರಪಂಚದ ನಾಲ್ಕನೇ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯನ್ನು ಹೊಂದಿದೆ. ಭಾರತ ದೇಶವು ಪ್ರಾಚೀನ ಸಿಂಧೂತಟದ ನಾಗರೀಕತೆಯ ತವರು ಮನೆಯಾಗಿದೆ. ಅನೇಕ ಐತಿಹಾಸಿಕ ವಾಣಿಜ್ಯ ಮಾರ್ಗಗಳು ಹಾಗೂ ಪ್ರಾಚೀನ ಸಾಮ್ರಾಜ್ಯಗಳು ಭಾರತ ದೇಶದಲ್ಲಿ ಉಗಮಿಸಿವೆ. ಪ್ರಪಂಚದ ನಾಲ್ಕು ಪ್ರಮುಖ ಧರ್ಮಗಳಾದ ಹಿಂದೂ, ಬೌದ್ಧ, ಜೈನ ಮತ್ತು ಸಿಖ್ ಗಳು ಭಾರತದಲ್ಲಿ ಆರಂಭವಾಗಿವೆ. ಝೊರಾಷ್ಟ್ರಿಯನಿಜ಼ಂ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮ ಕ್ರಿ.ಶ ೭ನೇ ಸಹಸ್ರಮಾನದಲ್ಲಿ ಆಗಮಿಸಿ ಈ ಪ್ರದೇಶದ ಸಂಸ್ಕೃತಿಯನ್ನು ವೈವಿಧ್ಯಮಯವಾಗಿಸಿವೆ. ೧೬ನೇ ಶತಮಾನದಲ್ಲಿ ಭಾರತ ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿಯಿಂದ ಆಕ್ರಮಣಗೊಂಡು ಇಂಗ್ಲೆಂಡಿನ ಆಡಳಿತಕ್ಕೊಳಪಟ್ಟಿತು. ೧೯ನೇ ಶತಮಾನದ ಮಧ್ಯದಲ್ಲಿ ಭಾರತ ಅನೇಕ ಸ್ವಾತಂತ್ರ್ಯ ಹೋರಾಟದ ಫಲವಾಗಿ ಬ್ರಿಟೀಷರಿಂದ ಸ್ವತಂತ್ರವಾಯಿತು. ಹೆಸರಿನ ಉಗಮ ಭಾರತ ಎಂಬ ಹೆಸರು "ಭರತವರ್ಷ" ಎಂಬ ಹೆಸರಿನಿಂದ ಉಗಮಗೊಂಡದ್ದು. ಪುರಾತನ ಪೌರಾಣಿಕ ಆಕರಗಳಿಂದಲೂ ಈ ಹೆಸರು ಭಾರತಕ್ಕೆ ಸೂಚಿತವಾಗಿದೆ. ವೃಷಭದೇವನ ಮಗ ಭರತ ಚಕ್ರವರ್ತಿಯಿಂದ ಅಥವಾ ಮಹಾರಾಜ ದುಶ್ಯಂತನ ಪುತ್ರನಾದ ಭರತ ಮಹಾರಾಜನ ಹೆಸರಿನಿಂದ ಬಂದದ್ದು. "ಇಂಡಿಯಾ" ಎಂಬ ಹೆಸರು ಸಿಂಧೂ ನದಿಯ ಪರ್ಷಿಯನ್ ರೂಪಾಂತರ "ಇಂಡಸ್" ಎಂಬುದರಿಂದ ಬಂದದ್ದು. ಭಾರತವನ್ನು ನಿರ್ದೇಶಿಸಲು ಉಪಯೋಗಿಸಲಾಗಿರುವ ಇತರ ಹೆಸರುಗಳಲ್ಲಿ ಒಂದು ಹಿಂದೂಸ್ಥಾನ ಕೂಡ ಒಂದು. ಚರಿತ್ರೆ ಭಾರತದಲ್ಲಿ ಜನವಸತಿಯ ಮೊದಲ ಕುರುಹುಗಳೆಂದರೆ ಈಗಿನ ಮಧ್ಯ ಪ್ರದೇಶ ರಾಜ್ಯದ ಬಿಂಭೇಟ್ಕಾದಲ್ಲಿ ದೊರೆತಿರುವ ಶಿಲಾಯುಗದ ಪಳೆಯುಳಿಕೆಗಳು. ಸುಮಾರು ೯೦೦೦ ವರ್ಷಗಳ ಹಿಂದೆ ನಾಗರೀಕತೆಯ ಕುರುಹುಗಳು ಕಂಡು ಬಂದು ಕ್ರಿ.ಪೂ ೨೬೦೦ ರಿಂದ ಕ್ರಿ.ಪೂ. ೧೯೦೦ ರ ವರೆಗೆ ಸಿಂಧೂ ಕಣಿವೆ ನಾಗರೀಕತೆ ಅಸ್ತಿತ್ವದಲ್ಲಿತ್ತು. ನಂತರ ವೇದಗಳನ್ನು ಆಧರಿಸಿ ಹಿಂದೂ ಧರ್ಮ ಬೆಳೆಯಿತು. ಆ ಸಂದರ್ಭದಲ್ಲಿ ಬೌದ್ಧ ಧರ್ಮ ಮತ್ತು ಜೈನ ಧರ್ಮಗಳು ಸಹ ಉಗಮಗೊಂಡವು. ಕ್ರಿ.ಪೂ ೫೦೦ ರ ನಂತರ ಅನೇಕ ಸ್ವತಂತ್ರ ರಾಜ್ಯಗಳು ತಲೆಯೆತ್ತಲಾರಂಭಿಸಿದವು. ಮೌರ್ಯ ಸಾಮ್ರಾಜ್ಯ ಭಾರತವನ್ನು ಸರಿ ಸುಮಾರಾಗಿ ಒಗ್ಗೂಡಿಸಿದ ಮೊದಲ ಸಾಮ್ರಾಜ್ಯ. ನಂತರ ಗುಪ್ತ ಸಾಮ್ರಾಜ್ಯ ಭಾರತದ "ಸುವರ್ಣ ಯುಗ"ದಲ್ಲಿ ಆಡಳಿತ ನಡೆಸಿತು. ಈ ಕಾಲದಲ್ಲಿ ಸಾಹಿತ್ಯ, ವಿಜ್ಞಾನ, ತತ್ವಶಾಸ್ತ್ರ ಮೊದಲಾದ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಭಾರತ ಸಾಧಿಸಿತು. ಎರಡನೆಯ ಸಹಸ್ರಮಾನದ ಆರಂಭದಲ್ಲಿ ಅನೇಕ ಮುಸ್ಲಿಮ್ ರಾಜರ ದಾಳಿ ಆರಂಭವಾಗಿ ೧೨ ನೆಯ ಶತಮಾನದಿಂದ ಮುಂದಕ್ಕೆ ಉತ್ತರ ಭಾರತದ ಅನೇಕ ಭಾಗಗಳು ಮತ್ತು ದಕ್ಷಿಣ ಭಾರತದ ಕೆಲ ಭಾಗಗಳು ಮುಸ್ಲಿಮ್ ಆಡಳಿತಕ್ಕೆ ಒಳಪಟ್ಟವು. (ಉದಾಹರಣೆಗೆ ದೆಹಲಿ ಸುಲ್ತಾನೇಟ್, ಬಹಮನಿ ಸುಲ್ತಾನರು, ಮೊಘಲ್ ಸಾಮ್ರಾಜ್ಯ). ೧೭ ನೆಯ ಶತಮಾನದಿಂದ ಮುಂದಕ್ಕೆ ಪೋರ್ಚುಗೀಸ್, ಫ್ರೆಂಚ್ ಮತ್ತು ಬ್ರಿಟಿಷ್ ವ್ಯಾಪಾರಿಗಳು ಭಾರತಕ್ಕೆ ಬರಲಾರಂಭಿಸಿದರು. ಹಂಚಿಹೋಗಿದ್ದ ಭಾರತದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಭಾರತದ ಅನೇಕ ಪ್ರದೇಶಗಳನ್ನು ಇವರು ವಶಪಡಿಸಿಕೊಳ್ಳಲಾರಂಭಿಸಿದರು. ಎಲ್ಲರಿಗಿಂತ ಪ್ರಬಲವಾಗಿ ಬೆಳೆದ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿ ಹೆಚ್ಚು ಕಡಿಮೆ ಸಂಪೂರ್ಣ ಭಾರತದ ಮೇಲೆ ಅಧಿಪತ್ಯ ಸ್ಥಾಪಿಸಿತು. ೧೮೫೭ ರಲ್ಲಿ ಭಾರತದ ಅನೇಕ ರಾಜ್ಯಗಳು ಬ್ರಿಟಿಷರ ವಿರುದ್ಧ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡವು. ಇದರ ನಂತರ ನೇರ ಬ್ರಿಟಿಷ್ ಆಡಳಿತಕ್ಕೆ ಭಾರತ ಸಾಗಿತು. ಸ್ವಲ್ಪ ಕಾಲದಲ್ಲಿಯೇ ಭಾರತ ಸ್ವಾತಂತ್ರ್ಯ ಚಳುವಳಿ ಆರಂಭವಾಗಿ ಆಗಸ್ಟ್ ೧೫, ೧೯೪೭ ರಲ್ಲಿ ಭಾರತ ಸ್ವಾತಂತ್ರ್ಯ ಪಡೆಯಿತು. ಸ್ವಾತಂತ್ರ್ಯಾ ನಂತರ ನೆರೆಯ ದೇಶಗಳೊಂದಿಗೆ ಒಟ್ಟು ನಾಲ್ಕು ಯುದ್ಧಗಳು ನಡೆದಿವೆ. ೧೯೭೪ ರಲ್ಲಿ ಭಾರತ ಅಣುಶಕ್ತಿ ಉತ್ಪಾದನಾ ಸಾಮರ್ಥ್ಯವನ್ನು ಪಡೆಯಿತು. ೧೯೭೫ ರಿಂದ ೭೭(77) ರ ವರೆಗೆ ಇಂದಿರಾ ಗಾಂಧಿಯವರ ಸರ್ಕಾರದಲ್ಲಿ ತುರ್ತು ಪರಿಸ್ಥಿತಿ ಏರ್ಪಟ್ಟಿತ್ತು. ೯೦ ರ ದಶಕದಿಂದ ಆರ್ಥಿಕ ಉದಾರೀಕರಣ ನೀತಿಯನ್ನು ಭಾರತ ಪಾಲಿಸುತ್ತಾ ಬಂದಿದೆ. ಭೂಗೋಳ ಭಾರತದ ಭೌಗೋಳಿಕ ಭಾಗಗಳಲ್ಲಿ ಮುಖ್ಯವಾದವು: ಹಿಮಾಲಯ ಪರ್ವತಶ್ರೇಣಿ ಉತ್ತರದ ಸಮತಟ್ಟು ಪ್ರದೇಶ ಥಾರ್ ಮರುಭೂಮಿ ದಖನ್ ಪ್ರಸ್ತಭೂಮಿ ಭಾರತದಲ್ಲಿ ಹರಿಯುವ ಮುಖ್ಯವಾದ ನದಿಗಳಲ್ಲಿ ಕೆಲವೆಂದರೆ ಸಿಂಧೂ, ಗಂಗಾ, ಬ್ರಹ್ಮಪುತ್ರ, ಯಮುನಾ, ನರ್ಮದಾ, ಗೋದಾವರಿ, ಕೃಷ್ಣಾ, ಕಾವೇರಿ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಭಾರತವನ್ನು ಕೆಳಗಿನ ಮುಖ್ಯ ಭಾಗಗಳಾಗಿ ವಿಂಗಡಿಸಲಾಗಿದೆ: ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳು ಆರ್ಥಿಕ ವ್ಯವಸ್ಥೆ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ವ್ಯವಸ್ಥೆಯನ್ನು ಭಾರತ ಹೊಂದಿದ್ದು, ಒಟ್ಟು ರಾಷ್ಟ್ರೀಯ ಉತ್ಪಾದನೆಯ ದೃಷ್ಟಿಯಿಂದ ಪ್ರಪಂಚದಲ್ಲಿ ಹನ್ನೆರಡನೆಯ ಸ್ಥಾನವನ್ನು ಹೊಂದಿದೆ. ಕೊಳ್ಳುವ ಶಕ್ತಿಯ ಮೇರೆಗೆ ಮೂರನೆ ಸ್ಥಾನವನ್ನು ಹೊಂದಿದೆ. ಆದರೆ ಭಾರತದ ಜನಸಂಖ್ಯೆಯನ್ನು ಗಮನಿಸಿ ಸರಾಸರಿ ಒಬ್ಬ ವ್ಯಕ್ತಿಯ ಆದಾಯ ಸುಮಾರು ವರ್ಷಕ್ಕೆ ೧೧,೦೦೦ ರೂಪಾಯಿಗಳಷ್ಟು. ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು ಬೆಳೆದ ನಂತರ ಭಾರತೀಯ ಮಧ್ಯಮ ವರ್ಗ ಹೆಚ್ಚುತ್ತಾ ಬಂದಿದೆ. ಭಾರತದ ಮುಖ್ಯ ವೃತ್ತಿಗಳಲ್ಲಿ ಕೆಲವೆಂದರೆ ಕೃಷಿ, ಬಟ್ಟೆಗಳ ತಯಾರಿಕೆ, ಪೆಟ್ರೋಲಿಯಮ್ ಉತ್ಪನ್ನಗಳು, ಮಾಹಿತಿ ತಂತ್ರಜ್ಞಾನ, ಚಲನ ಚಿತ್ರಗಳು ಹಾಗೂ ಕುಶಲ ಕೈಗಾರಿಕೆ. ವಾರ್ಷಿಕವಾಗಿ ಸುಮಾರು ೨೦ ಲಕ್ಷ ಅಂತರರಾಷ್ಟ್ರೀಯ ಪ್ರವಾಸಿಗಳು ಭಾರತಕ್ಕೆ ಬರುತ್ತಾರೆ. ಭಾರತದೊಂದಿಗೆ ಹೆಚ್ಚಾಗಿ ಅಂತಾರಾಷ್ಟ್ರೀಯ ವ್ಯಾಪಾರ ನಡೆಸುವ ದೇಶ-ಸಂಸ್ಥೆಗಳೆಂದರೆ ಅಮೆರಿಕದ ಸಂಯುಕ್ತ ಸಂಸ್ಥಾನ, ರಷ್ಯಾ, ಯುರೋಪಿಯನ್ ಒಕ್ಕೂಟ, ಚೀನಾ ಮತ್ತು ಜಪಾನ್. ಜನಸಂಖ್ಯಾ ಅಂಕಿ ಅಂಶಗಳು ಭಾರತ ಪ್ರಪಂಚದಲ್ಲಿ ಎರಡನೆ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಭಾರತೀಯ ಸಮಾಜದಲ್ಲಿ ಭಾಷೆ, ಧರ್ಮ, ಜಾತಿ ಮೊದಲಾದ ಅನೇಕ ಅಂಶಗಳು ವಿವಿಧ ಪಾತ್ರಗಳನ್ನು ವಹಿಸುತ್ತವೆ. ಭಾರತದ ಅತಿ ದೊಡ್ಡ ನಗರಗಳೆಂದರೆ ಮುಂಬಯಿ, ದೆಹಲಿ, ಬೆಂಗಳೂರು, ಕೋಲ್ಕತ್ತ ಮತ್ತು ಚೆನೈ ಭಾರತದ ಸಾಕ್ಷರತಾ ಪ್ರಮಾಣ ಶೇ. ೬೪.೮. ಧರ್ಮದ ದೃಷ್ಟಿಯಿಂದ, ಜನಸಂಖ್ಯೆಯ ವಿಂಗಡಣೆ ಹೀಗಿದೆ: ಹಿಂದೂ (೮೦.೫ %), ಮುಸ್ಲಿಮ್ (೧೩.೪ %), ಕ್ರೈಸ್ತ (೨.೩೩ %), ಸಿಖ್ (೧.೮೪ %), ಬೌದ್ಧ (೦.೭೬ %), ಜೈನ (೦.೪ %). ಭಾರತದಲ್ಲಿರುವ ಇತರ ಧಾರ್ಮಿಕ ವರ್ಗಗಳಲ್ಲಿ ಕೆಲವೆಂದರೆ ಯಹೂದಿ, ಪಾರ್ಸಿ, ಅಹ್ಮದಿ ಮತ್ತು ಬಹಾ-ಈ. ಭಾರತದಲ್ಲಿರುವ ಎರಡು ಮುಖ್ಯ ಭಾಷಾ ಬಳಗಗಳೆಂದರೆ ಉತ್ತರ ಭಾರತದ ಇಂಡೋ-ಆರ್ಯನ್ ಭಾಷಾ ಬಳಗ ಮತ್ತು ದಕ್ಷಿಣ ಭಾರತದ ದ್ರಾವಿಡ ಭಾಷಾ ಬಳಗ. ಭಾರತ ೨೨ ಅಧಿಕೃತ ಭಾಷೆಗಳನ್ನು ಹೊಂದಿದೆ. ೧೯೦೧ ಮತ್ತು ನಂತರದ ಗಣತಿ 1901 ಮತ್ತು ನಂತರದ ಜನಗಣತಿ 2011 ಜನಗಣತಿಯ ಅಂಕಿಅಂಶಗಳು ಜನಸಂಖ್ಯೆಯ ಬೆಳವಣಿಗೆ ಮತ್ತು ಹೋಲಿಕೆ ಇದು ಜನಸಂಖ್ಯಾ ವಿವರ ಮತ್ತು ಹೋಲಿಕೆ : 1947 ರಲ್ಲಿ ಭಾರತ ವಿಭಜನೆ ಗೊಂಡಾಗ ವಿಭಜಿತ ಭಾರತದ ಜನಸಂಖ್ಯೆ ಕೇವಲ 350 ಮಿಲಿಯನ್. (35 ಕೋಟಿ) 1947 ಪೂರ್ವ ಪಾಕಿಸ್ತಾನ 4.26 ಮಿಲಿಯನ್ +3.40ಮಿ ಪಶ್ಚಿಮ ಪಾಕಿಸ್ತಾನ =(7ಕೋಟಿ 66 ಲಕ್ಷ) 1947 ರಲ್ಲಿ ಜನಸಂಖ್ಯೆ ಪಶ್ಚಿಮ + ಪೂರ್ವ ಪಾಕಿಸ್ತಾನ :76 ಮಿಲಿಯನ್ ಪಶ್ಚಿಮ ಪಾಕಿಸ್ತಾನ 3400000 ಪೂರ್ವ ಪಾಕಿಸ್ತಾನ 42600000 1967 ರಲ್ಲಿ ಜನಸಂಖ್ಯೆ ಪಶ್ಚಿಮ + ಪೂರ್ವ ಪಾಕಿಸ್ತಾನ :94 ಮಿಲಿಯನ್ ಪಶ್ಚಿಮ ಪಾಕಿಸ್ತಾನ 43000000 ಪೂರ್ವ ಪಾಕಿಸ್ತಾನ 51000000 2011 / 2012 ರಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಒಟ್ಟು ಜನಸಂಖ್ಯೆ 331 ಮಿಲಿಯನ್ :(33 ಕೋಟಿ 10ಲಕ್ಷ ) ಪಶ್ಚಿಮ ಪಾಕಿಸ್ತಾನ (170,000000) 180440005; ಬಾಂಗ್ಲಾದೇಶ (ಹಿಂದಿನ ಪೂರ್ವ ಪಾಕಿಸ್ತಾನ) 161,083,804/ 161083804 1947ವಿಭಜಿತ ಭಾರತದ ಜನಸಂಖ್ಯೆ 350,000,000 (35ಕೋಟಿ) 2011 (ವಿಭಜಿತ) ಈಗಿನ ಭಾರತದ ಜನಸಂಖ್ಯೆ 121,01,93,422 (121 ಕೋಟಿ). ದೇಶದ ಮೂರನೇ ಸಿರಿವಂತ ನಗರ 27 Feb, 2017 ಭಾರತದ ಅತ್ಯಂತ ಶ್ರೀಮಂತ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಮೂರನೇ ಸ್ಥಾನ ಪಡೆದಿದೆ. ದೇಶದ ಅತ್ಯಂತ ಶ್ರೀಮಂತ ನಗರ ಎಂಬ ಹೆಗ್ಗಳಿಕೆಗೆ ವಾಣಿಜ್ಯ ನಗರಿ ಮುಂಬೈ ಪಾತ್ರವಾಗಿದ್ದರೆ, ದೆಹಲಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮುಂಬೈನ ಸಂಪತ್ತಿನ ಮೊತ್ತ ರೂ.54.6 ಲಕ್ಷ ಕೋಟಿ. ಇನ್ನು ದೆಹಲಿ ಮತ್ತು ಬೆಂಗಳೂರಿನ ಸಂಪತ್ತು ಕ್ರಮವಾಗಿ ರೂ.29.9 ಲಕ್ಷ ಕೋಟಿ ಮತ್ತು ರೂ.21.3 ಲಕ್ಷ ಕೋಟಿಯಷ್ಟಿದೆ. ಮಾರುಕಟ್ಟೆ ಸಂಶೋಧನಾ ಸಂಸ್ಥೆ, ನ್ಯೂ ವರ್ಲ್ಡ್‌ ವೆಲ್ತ್‌ ಬಿಡುಗಡೆ ಮಾಡಿರುವ 2016ನೇ ಸಾಲಿನ ವರದಿಯಲ್ಲಿ ಈ ಮಾಹಿತಿ ಇದೆ. ವಲಸೆ ಸ್ವದೇಶದಿಂದ ವಲಸೆ ಹೋಗುತ್ತಿರುವ ಸಿರಿವಂತರ ಸಂಖ್ಯೆಯಲ್ಲಿ ಭಾರಿ ಏರಿಕೆ ಆಗಿದೆ. 2016ರಲ್ಲಿ ವಿಶ್ವದಾದ್ಯಂತ 82 ಸಾವಿರ, ಅತಿ ಸಿರಿವಂತರು ವಲಸೆ ಹೋಗಿದ್ದಾರೆ. ಈ ರೀತಿ ಅತಿ ಹೆಚ್ಚು ವಲಸೆ ಹೋದ ಮೊದಲ ಐದು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಇದೆ. ಈ ಸಾಲಿನಲ್ಲಿ ಒಟ್ಟು 6 ಸಾವಿರ ಸಿರಿವಂತರು ತಮ್ಮ ವಾಸ್ತವ್ಯವನ್ನು ಭಾರತದಿಂದ ಬೇರೆ ದೇಶಗಳಿಗೆ ಬದಲಿಸಿದ್ದಾರೆ. 2015ನೇ ಸಾಲಿನಲ್ಲಿ ಹೀಗೆ ವಲಸೆ ಹೋದವರ ಸಂಖ್ಯೆ 4 ಸಾವಿರ. ಹಿಂದಿನ ವರ್ಷಕ್ಕೆ ಹೋಲಿಸಿದರೆ 2016ರಲ್ಲಿ ವಲಸೆ ಹೋದ ಸಿರಿವಂತರ ಸಂಖ್ಯೆಯಲ್ಲಿ ಶೇ 50 ರಷ್ಟು ಹೆಚ್ಚಳವಾಗಿದೆ. ಶತ ಕೋಟ್ಯಧಿಪತಿಗಳು 10 ಲಕ್ಷ ಅಮೆರಿಕನ್ ಡಾಲರ್‌ನಿಂದ 100 ಕೋಟಿ ಅಮೆರಿಕನ್ ಡಾಲರ್‌ವರೆಗೆ (ಸುಮಾರು ₹ 6.6 ಕೋಟಿಯಿಂದ ₹ 6.6 ಸಾವಿರ ಕೋಟಿ) ಸಂಪತ್ತು ಹೊಂದಿರುವವರನ್ನು ಮಿಲಿಯನೇರ್ ಅಥವಾ ಶತ ಕೋಟ್ಯಧಿಪತಿ ಎಂದು ನ್ಯೂ ವರ್ಲ್ಡ್‌ ವೆಲ್ತ್‌ ವರದಿಯಲ್ಲಿ ಪರಿಗಣಿಸಲಾಗಿದೆ. 100 ಕೋಟಿ ಅಮರಿಕನ್‌ ಡಾಲರ್‌ಗಿಂತ (ಸು. ₹ 6.6 ಸಾವಿರ ಕೋಟಿ) ಹೆಚ್ಚು ಸಂಪತ್ತು ಇದ್ದವರನ್ನು ಬಿಲಿಯನೇರ್‌ ಅಥವಾ ಸಹಸ್ರ ಕೋಟ್ಯಾಧಿಪತಿಗಳು ಎಂದು ಕರೆಯಲಾಗಿದೆ. ರಾಜಕೀಯ ೧೯೯೮ ರಿಂದ ೨೦೧೯/2019ರ ವರೆಗಿನ ಲೋಕಸಭೆ ಚುನಾವಣೆ ಸಾರಾಂಶ ದಪ್ಪಗಿನ ಅಕ್ಷರ ನೋಡಿ ಭಾರತದ ಇತಿಹಾಸ ಭಾರತ ಗಣರಾಜ್ಯದ ಇತಿಹಾಸ ೨೦೧೪ ಭಾರತದ ಸಾರ್ವತ್ರಿಕ ಲೋಕಸಭಾ ಚುನಾವಣೆ ಮತ್ತು ಫಲಿತಾಂಶ ಭಾರತದ ಕೇಂದ್ರ ಮಂತ್ರಿ ಮಂಡಲ ೨೦೧೪ ಭಾರತದ ಸಾರ್ವತ್ರಿಕ ಚುನಾವಣೆ, ೨೦೦೯ ೨೦೦೯ರ ಭಾರತದ ಸಾರ್ವತ್ರಿಕ ಚುನಾವಣೆ ಭಾರತದ ಜನಸಂಖ್ಯೆಯ ಬೆಳವಣಿಗೆ ಲೋಕಸಭೆ ಟೆಲಿಗ್ರಾಂ-ಟೆಲಿಗ್ರಾಂ ರಾಜ್ಯಸಭೆ ಭಾರತ ಮತ್ತು ಪಾಕೀಸ್ತಾನಗಳ ಆರ್ಥಿಕ ಬಲ ಮತ್ತು ಸೈನ್ಯ ಬಲ ಹೊರ ಸಂಪರ್ಕ ಫ್ರಾನ್ಸ್ ಹಿಂದಿಕ್ಕಿದ ಭಾರತ, ಈಗ ವಿಶ್ವದ 6ನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರ;11 Jul 2018 ಉಲ್ಲೇಖಗಳು ಬಾಹ್ಯ ಸಂಪರ್ಕಗಳು ಭಾರತ ಸರ್ಕಾರದ ಅಧಿಕೃತ ತಾಣಗಳು ಭಾರತದ ಪ್ರಧಾನ ಮಂತ್ರಿ ಭಾರತದ ಅಧ್ಯಕ್ಷರು ಭಾರತೀಯ ಸಂಸತ್ತು ರಕ್ಷಣಾ ಸಚಿವಾಲಯ ಭಾರತದ ಜನಗಣತಿ ಭಾರತದ ಸರ್ವೋಚ್ಚ ನ್ಯಾಯಾಲಯ ವಿದೇಶ ವ್ಯವಹಾರಗಳ ಸಚಿವಾಲಯ ಚುನಾವಣಾ ಆಯೋಗ ವಿದ್ಯುನ್ಮಾನ ವಿಭಾಗ ಪ್ರವಾಸೋದ್ಯಮ ಶಿಕ್ಷಣಾ ವಿಭಾಗ ಏಷ್ಯಾ ಖಂಡದ ದೇಶಗಳು ದೇಶಗಳು ದಕ್ಷಿಣ ಏಷ್ಯಾ ಭಾರತೀಯ ಉಪಖಂಡ
817
https://kn.wikipedia.org/wiki/%E0%B2%9C%E0%B3%8B%E0%B2%97
ಜೋಗ
ಜೋಗ ಅಥವಾ 'ಗೇರುಸೊಪ್ಪಿನ ಜಲಪಾತ' ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲೊಂದು. ಇದು ಭಾರತದ ಎರಡನೆಯ ಅತಿ ಎತ್ತರದ ಜಲಪಾತ. ಇದು ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ದಟ್ಟವಾದ ಕಾಡು ಹಾಗು ಗುಡ್ಡಗಳಿಂದ ಆವೃತ್ತವಾದ ಸ್ಥಳದಲ್ಲಿದೆ. ಜೋಗ ಜಲಪಾತವನ್ನು ವೀಕ್ಷಿಸುವ ತಾಣ ಜೋಗವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಇದು ಒಂದು ಪ್ರಮುಖ ಪ್ರವಾಸಿ ತಾಣ. ಜೋಗ ಜಲಪಾತವು ಸುಮಾರು ೨೯೨ ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ಧುಮುಕುತ್ತದೆ. ವೈಭವದಿಂದ ಅವ್ಯಾಹತವಾಗಿ ಧುಮಕುವ ರಾಜ, ಜೋರಾಗಿ ಆರ್ಭಟಿಸುತ್ತ ಹಲವಾರು ಭಾರಿ ಚಿಮ್ಮುತ್ತ ಧುಮಕುವ ರೋರರ್, ಬಳಕುತ್ತಾ ಜಾರುವ ರಾಣಿ(ಲೇಡಿ) ಮತ್ತು ರಭಸದಿಂದ ಹಲವಾರು ಬಂಡೆಗಳನ್ನು ಚಿಮ್ಮುತ್ತಾ ನುಗ್ಗುವ ರಾಕೆಟ್ ಈ ನಾಲ್ಕು ಜಲ ಭಾಗಗಳಾಗಿವೆ. ಮಳೆಗಾಲದಲ್ಲಿ ಅತ್ಯ೦ತ ರಮಣೀಯರೂಪ ತೊಡುವ ಈ ಜಲಪಾತ ಬಿಳಿ ಮೋಡಗಳ ಹಿಂದೆ ಕಣ್ಣಾಮುಚ್ಚಾಲೆ ಆಡುತ್ತ ನೋಡುಗರ ಕಣ್ಮನ ಸೆಳೆಯುವುದು. ಲಿಂಗನಮಕ್ಕಿ ಜಲಾಶಯದ ನಿರ್ಮಾಣದ ನಂತರ ಜೋಗ ತನ್ನ ಮೊದಲಿನ ಸೌಂದರ್ಯ ಹಾಗು ವೈಭವವನ್ನು ಕಳೆದುಕೊಂಡಿದೆ ಎಂದು ಅನೇಕರು ಹೇಳುತ್ತಾರೆ. ಜಲಪಾತ ವಿವರಣೆ ಶರಾವತಿ ನದಿಯ ಜಲಪಾತ ಗೇರುಸೊಪ್ಪೆ ಎಂದೂ ಪ್ರಸಿದ್ಧ. ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಗಡಿ ಮಧ್ಯೆ ಇರುವ ಈ ಜಲಪಾತ ಸಾಗರ ತಾಲ್ಲೂಕಿನ ತಾಳಗುಪ್ಪ ರೈಲು ನಿಲ್ದಾಣಕ್ಕೆ ೧೬ ಕಿಮೀ ದೂರದಲ್ಲಿದೆ. ಜಲಪಾತ ಶಿವಮೊಗ್ಗದಿಂದ ೧೦೦ ಕಿಮೀ ದೂರದಲ್ಲೂ, ಹೊನ್ನಾವರದಿಂದ ೫೬ ಕಿಮೀ ದೂರದಲ್ಲೂ ಇದೆ. ಇಲ್ಲಿ ಶರಾವತಿ ನದಿ ೨೫೨.೭ ಮೀ (೮೨೯ ಅಡಿ) ಆಳದ ಪ್ರಪಾತಕ್ಕೆ ಧುಮುಕುತ್ತದೆ. ಸೌಂದರ್ಯಪೂರ್ಣ ಔನ್ನತ್ಯದಲ್ಲಿ ಗೇರುಸೊಪ್ಪೆಯನ್ನು ಮೀರಿಸುವ ಜಲಪಾತ ಜಗತ್ತಿನಲ್ಲೆಲ್ಲೂ ಇಲ್ಲ. ಆಲ್ಪ್ಸ್ ಪರ್ವತದಲ್ಲಿರುವ ಸೆರೊಸೊಲಿ (೨೪೦೦ ಅಡಿ), ಎವಾನ್ಸನ್ (೧೨೦೦ ಅಡಿ) ಮತ್ತು ಆರ್ವೆ (೧೧೦೦ ಅಡಿ) ಜೋಗ ಜಲಪಾತಕ್ಕಿಂತ ಎತ್ತರವಾಗಿವೆಯಾದರೂ ಅವುಗಳಲ್ಲಿ ಜೋಗದಷ್ಟು ಜಲಸಮೃದ್ಧಿ ಇಲ್ಲ. ನಯಾಗರ ಜಲಪಾತದ ನೀರಿನ ಮೊತ್ತ ಜೋಗದ್ದಕ್ಕಿಂತ ಅಧಿಕವಾಗಿದ್ದರೂ, ಅದರ ಎತ್ತರ (೧೬೪ ಅಡಿ) ಗೇರುಸೊಪ್ಪೆಯಷ್ಟು ಇಲ್ಲ. ಶರಾವತಿ ನದಿ ಹರಿದು ಧುಮುಕುವ ಕಮರಿಯ ಬಂಡೆ ೨೫೦ ಗಜಗಳಷ್ಟು ಉದ್ದವಾಗಿದೆ. ನಾಲ್ಕು ಪ್ರತ್ಯೇಕ ಬಿರುಕುಗಳಿಂದ ನದಿ ರಭಸದಿಂದ ಇಳಿದು ಕಮರಿಗೆ ಬೀಳುತ್ತದೆ. ಅದು ಧುಮುಕುವ ಠೀವಿ ಮನಮೋಹಕವಾದ್ದು. ಜಲಪಾತದ ನಾಲ್ಕು ಕವಲುಗಳ ಪೈಕಿ ರಾಜಾ ಸುಮಾರು ೮೨೯ ಅಡಿ ಆಳಕ್ಕೆ ಧುಮುಕುತ್ತದೆ. ರಾಜಾ ಬೀಳುತ್ತಿರುವಂತೆಯೇ ಸ್ವಲ್ಪ ಕೆಳಗೆ, ಬಂಡೆಯ ಬಿರುಕಿನಿಂದ ಹರಿದು ಬೀಳುವ ರೋರರ್ ಜಲಪಾತವನ್ನು ಅಪ್ಪಿಕೊಂಡು, ಅದರೊಂದಿಗೆ ಕಮರಿಗೆ ಬೀಳುತ್ತದೆ. ಮೂರನೆಯ ಜಲಪಾತ ರಾಕೆಟ್ ಬಂಡೆಯ ಮೇಲಿನಿಂದ ಹಲವು ಧಾರೆಗಳಲ್ಲಿ ಚಿಮ್ಮಿ ತಳಕ್ಕೆ ಕುಪ್ಪಳಿಸುತ್ತದೆ. ನಾಲ್ಕನೆಯ ರಾಣಿ ಜಲಪಾತ (ಲೇಡಿ ಬ್ಲಾಂಚೆ) ಬೀಳುವ ರಭಸದಿಂದೇಳುವ ನೊರೆಯಿಂದ ತುಂಬಿ ಸೊಗಸುಗಾತಿಯಂತೆ ಪ್ರಪಾತಕ್ಕೆ ಇಳಿಯುತ್ತದೆ. ಮಳೆಗಾಲದಲ್ಲಿ ಹೆಚ್ಚು ನೀರು ರಭಸದಿಂದ ಬೀಳುವ ಕಾರಣ ನೀರಿನಿಂದ ಏಳುವ ಧೂಮ ಪ್ರಪಾತವನ್ನು ಆವರಿಸಿದ್ದು ನೀರಿನ ಭೋರ್ಗರೆತದ ಶಬ್ದ ಹೃದಯವನ್ನು ಕಂಪಿಸುವಂತಿರುತ್ತದೆ. ಮಳೆಗಾಲದ ಅನಂತರದ ತಿಂಗಳುಗಳಲ್ಲಿ ನದಿಯ ಪ್ರವಾಹ ಸರಿಯಾದ ಗಾತ್ರದಲ್ಲಿರುವುದರಿಂದ ಜಲಪಾತ ನೋಡಲು ರಮ್ಯವಾಗಿರುತ್ತದೆ. ಜಲಪಾತದ ಪೂರ್ಣ ದೃಶ್ಯವನ್ನು ಶಿವಮೊಗ್ಗ ಗಡಿ ಭಾಗದಿಂದ ನೋಡಬಹುದು. ಜಲಪಾತದ ಬಂಡೆಯ ಅಂಚುಗಳಲ್ಲಿರುವ ಪೊಟರೆಗಳಲ್ಲಿ ಕಾಡು ಪಾರಿವಾಳಗಳು ಮನೆ ಮಾಡಿಕೊಂಡು ಪ್ರಪಾತದ ಬಳಿ ಗುಂಪುಗುಂಪಾಗಿ ಹಾರುತ್ತಿರುತ್ತವೆ. ಸೂರ್ಯಕಿರಣಗಳಿಂದ ಜಲಪಾತದ ದಿನದ ವಿವಿಧ ಕಾಲಗಳಲ್ಲಿ ಕಾಮನ ಬಿಲ್ಲು ಅನೇಕ ವೈವಿಧ್ಯ ತಾಳುತ್ತದೆ. ಜಲಪಾತದ ಏಕತಾನದ ನಾದ ಹತ್ತಿರ ನಿಂತು ಕೇಳುವವರ ಕಿವಿಗಳಿಗೆ ಘನಗರ್ಜನೆಯಂತೆ ಕೇಳಿಸುತ್ತದೆ. ಅದರ ಮೇಘನಾದದ ಗಾಂಭೀರ್ಯ ನಿಸರ್ಗ ಸಂಗೀತದ ಒಂದು ನಿರುಪಮ ಮಾದರಿ. ಮೌನವನ್ನು ಸೀಳುವ ಆ ನಿತ್ಯನಾದವನ್ನು ಆಲಿಸುತ್ತ ನಿಂತವರಿಗೆ ಒಮ್ಮೆ ನಾದಸಮಾಧಿಯನ್ನು ಉಂಟುಮಾಡಬಹುದು. ಜೊತೆಗೆ ಬಿಸಿಲು ಹರಿದಂತೆ ಜಲಧರೆಗಳ ಮೇಲಿನ ಕಾಮನಬಿಲ್ಲುಗಳು ನಿತ್ಯ ನವ್ಯವಾಗಿ ಕಾಣಿಸುವುವು : ಬೆಳದಿಂಗಳ ರಾತ್ರಿಯಲ್ಲೂ ಕಾಮನಬಿಲ್ಲು ಕಾಣಿಸುವುದುಂಟು. ಈ ಜೀವಂತ ಪ್ರವಾಹದ ಸೌಮ್ಯ-ಭೀಕರತೆಗಳ ವರ್ಣನೆ ಮಾತಿಗೆ ನಿಲುಕದ್ದು. ಗೇರುಸೊಪ್ಪೆ ಜಲಪಾತದ ಮಾಹಿತಿ ಗಳನ್ನು ಸಂಗ್ರಹಿಸಲು ಮಾರ್ಚ್ ೧೮೫೬ರಲ್ಲಿ ಬಂದ ಇಬ್ಬರು ಬ್ರಿಟಿಷ್ ನೌಕಾಧಿಕಾರಿಗಳ ವರದಿಯಂತೆ- ಪ್ರಪಾತದ ಆಳ ೮೨೯ ಅಡಿಗಳು. ಪ್ರಪಾತದ ತಳದಲ್ಲಿ ನದಿ ಕೊರೆದಿರುವ ಮಡುವಿನ ಆಳ ೧೩೯ ಅಡಿಗಳು. ನದಿಯ ಆಡ್ಡಗಲ ಉತ್ತರ ಕನ್ನಡ ಮತ್ತು ಶಿವಮೊಗ್ಗ ದಂಡೆಗಳ ಮೇಲಿರುವ ಬಂಗಲೆಗಳ ನಡುವೆ ೨೧೩೦ ಅಡಿಗಳು. ೧೮೬೯ರ ಜನವರಿಯಲ್ಲಿ ಜಲಪಾತ ಪ್ರದೇಶಕ್ಕೆ ಭೇಟಿ ನೀಡಿದ್ದ ಶ್ರೀಮತಿ ಲೂಯಿ ಬ್ರೌನಿಂಗ್ ತಿಳಿಸುವಂತೆ- ಆಗ ಶಿವಮೊಗ್ಗ ಜಿಲ್ಲೆಯ ಅಂಚಿನ ಕಡೆ ಜಲಪಾತದ ಸಮೀಪದಲ್ಲಿ ಡೇರೆಯನ್ನು ಹಾಕಲು ಸಹ ಸಾಧ್ಯವಿಲ್ಲದಂತೆ ಒತ್ತಾದ ಕಾಡು ಬೆಳೆದಿತ್ತು. ಈಗ ಜಲಪಾತದ ಎದುರಿಗೆ, ನದಿ ಭೋರ್ಗರೆದು ಸಾಗುವ ಸುಂದರವಾದ ಸ್ಥಳದಲ್ಲಿ ಪ್ರವಾಸಿ ಬಂಗಲೆ, ಉಪಹಾರ ಗೃಹ ಮತ್ತು ಅಂಚೆ ಕಚೇರಿ ಇವೆ. ಅಕ್ಟೋಬರಿನಿಂದ ಫೆಬ್ರವರಿಯವರೆಗೆ ಸಹಸ್ರಾರು ಪ್ರವಾಸಿಗಳು ಜಗತ್ಪ್ರಸಿದ್ಧವಾದ ಈ ಮನೋಹರ ಸ್ಥಳಕ್ಕೆ ಭೇಟಿ ನೀಡುವುದುಂಟು. ಶರಾವತಿ ನದಿಯು ನಾಲ್ಕು ಹೋಳಾಗಿ ಕಣಿವೆಗೆ ಧುಮುಕುತ್ತದೆ. ನದಿಯ ನಾಲ್ಕೂ ಝರಿಗಳಿಗೆ ಹೆಸರುಗಳಿವೆ. ನೋಡುಗರ ಎಡದಿಂದ ಬಲಕ್ಕೆ ಹಸರುಗಳು ಈ ಕೆಳಗಿನಂತಿವೆ: ರಾಜ: ಈ ಝರಿಯು ರಾಜಗಾಂಭೀರ್ಯದಿಂದ ಧುಮುಕುತ್ತದೆ. ರೋರರ್: ಕಲ್ಲು ಬಂಡೆಗಳ ನಡುವಿನಿಂದ ನುಗ್ಗುವ ಈ ಝರಿಯು ಅತಿ ಹೆಚ್ಚಿನ ಶಬ್ದ ಮಾಡುತ್ತದೆ. ರಾಕೆಟ್: ಹೆಚ್ಚಿನ ಪ್ರಮಾಣದ ನೀರು ಸಣ್ಣ ಕಿಂಡಿಯಿಂದ ರಭಸವಾಗಿ ಧುಮುಕುತ್ತದೆ. ರಾಣಿ: ಈ ಝರಿಯ ಆಕಾರವು ಹೆಣ್ಣು ನರ್ತಕಿಯ ತಳುಕು-ಬಳುಕಿಗೆ ಹೋಲುತ್ತದೆ. ಮಹಾತ್ಮ ಗಾಂಧಿ ಜಲ ವಿದ್ಯುತ್ ಯೋಜನೆ ಮಹಾತ್ಮ ಗಾಂಧಿ ಜಲ ವಿದ್ಯುತ್ ಯೋಜನೆ ಜೋಗ ಜಲಪಾತದ ಬಳಿ ಇರುವ ವಿದ್ಯುತ್ ಸ್ಥಾವರ. ಸ್ವಾತಂತ್ರಪೂರ್ವದಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರು ಮೊದಲ ಬಾರಿ ಜೋಗಕ್ಕೆ ಭೇಟಿಯಿತ್ತಾಗ ಜೋಗ ಜಲಪಾತವನ್ನು ನೋಡಿ "ಎಂತಹ ವ್ಯರ್ಥ" ಎಂದು ಉದ್ಗರಿಸಿದರಂತೆ. ಅವರ ಈ ಮಾತಿನ ಫಲಶ್ರುತಿ ಈ ಜಲವಿದ್ಯುತ್ ಆಗಾರ. ೧೯೩೦ರ ದಶಕದ ಪೂರ್ವಭಾಗದಲ್ಲಿ ಮೈಸೂರು ಲೋಕೋಪಯೊಗಿ ಇಲಾಖೆಯಿಂದ ಜಲವಿದ್ಯುತ್ ಯೋಜನಾ ಕಾರ್ಯ ಶುರುವಾಯಿತು. ಮೊದಲ ಹಂತದ ಕೆಲಸ ೧೯೩೯ರಲ್ಲಿ ಜೋಗ ಜಲಪಾತದಿಂದ ೨೪ ಕಿ. ಮಿ. ದೂರದಲ್ಲಿರುವ ಹಿರೆಭಾಸ್ಕರ ಎಂಬ ಸ್ಥಳದಲ್ಲಿ ಶುರುವಾಯಿತು. ಮೊದಲು ಕೃಷ್ಣರಾಜೇಂದ್ರ ಜಲವಿದ್ಯುತ್ ಯೋಜನೆಯೆಂದು ಕರೆಯಲ್ಪಡುತಿದ್ದ ಈ ಯೋಜನೆಯನ್ನು ನಂತರ ಮಹಾತ್ಮ ಗಾಂಧಿ ಜಲವಿದ್ಯುತ್ ಯೊಜನೆಯೆಂದು ನಾಮಕರಣ ಮಾಡಲಾಯಿತು. ಫೆಬ್ರುವರಿ ೨೧ ೧೯೪೯ರಲ್ಲಿ ಉದ್ಘಾಟನೆಯಾದ ಈ ವಿದ್ಯುತ್ ಸ್ಥಾವರ ೧೨೦ ಮೆಗಾವ್ಯಾಟ್ ವಿದ್ಯುಚ್ಛಕ್ತಿ ಉತ್ಪಾದಿಸುವ ಕ್ಷಮತೆಯನ್ನು ಹೊಂದಿದೆ. ಮೊದಲು ಹಿರೆಭಾಸ್ಕರ ಜಲಾಶಯದಿಂದ ಈ ಯೊಜನೆಗೆ ನೀರಿನ ಸರಬರಾಜಾಗುತ್ತಿತ್ತು. ೬೦ರ ದಶಕದಲ್ಲಿ ಲಿಂಗನಮಕ್ಕಿ ಜಲಾಶಯ ಪ್ರಾರಂಭವಾದ ನಂತರ ಅದೆ ಈ ಯೋಜನೆಗೆ ನೀರಿನ ಮೂಲ. ಪ್ರವಾಸಿಗರಿಗೆ ಮಾರ್ಗದರ್ಶನ ಆಗಸ್ಟ್-ಡಿಸೆಂಬರ್ ಅವಧಿಯ ಜೋಗ ಜಲಪಾತವನ್ನು ವೀಕ್ಷಿಸಲು ಅತಿ ಸೂಕ್ತ ಸಮಯ. ಸಿದ್ದಾಪುರದಿಂದ ಜೋಗವು ೨೪ ಕಿಲೋಮೀಟರ್ ಹಾಗು ಬೆಂಗಳೂರಿನಿಂದ ೩೭೯ ಕಿಲೋಮೀಟರ್ ದೂರದಲ್ಲಿದೆ. ಬೆಂಗಳೂರಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನಲ್ಲಿ ಸಿದ್ದಾಪುರ ತಲುಪಿ, ಸಿದ್ದಾಪುರದಿಂದ ಖಾಸಗಿ ಬಸ್ಸಿನಲ್ಲಿ ಜೋಗ ತಲುಪಬಹುದು. ರೈಲಿನಲ್ಲಿ ಬರುವುದಾದರೆ ಬೆಂಗಳೂರಿನಿಂದ ಸಾಗರ ತಲುಪಿ,ಸಾಗರದಿಂದ ಜೋಗಕ್ಕೆ ಬಸ್ಸಿನಲ್ಲಿ ತಲುಪಬಹುದು. ಸಾಗರದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇದೆ. ಜೋಗದ ಜಲಪಾತ ಎಡದಲ್ಲಿ ನೇರವಾಗಿ ಬೀಳುತ್ತಿರುವುದು 'ರಾಜ' ;ಅದರ ಪಕ್ಕದಲ್ಲಿ ಸಂದಿಯಿಂದ ಧುಮುಕುತ್ತಿರುವುದು 'ರೋರರ್'-ಆರ್ಭಟ ಅದರದ್ದೇ ;ನಂತರದಲ್ಲಿ ಕೆಳಭಾಗಲ್ಲಿ ಮೂರು ಸೀಳು ಮೇಲೆ ಒಂದೇಇರುವ-ರಾಕೆಟ್ ಹಾರಿದಾಗ ಉಗುಳುವ ಹೊಗೆಯಂತಿರುವುದು 'ರಾಕೆಟ್'; ನಂತರ ಕೊನೆಯ ಬಲಭಾಗದಲ್ಲಿರುವುದು 'ಲೇಡಿ', ಮೆಲ್ಲಗೆ ಇಳಿಜಾರಿನಲ್ಲಿ ಜಾರುತ್ತಿದೆ. ಛಾಯಾಂಕಣ ಬಾಹ್ಯ ಸಂಪರ್ಕ ಮಳೆಗಾಲದ ಜಲಪಾತ ಮತ್ತು ಹೆಚ್ಚಿನ ವಿವರ:ಧುಮ್ಮಿಕ್ಕುವ ಜಲಪಾತ - ಜೋಗ;d: 27 ಆಗಸ್ಟ್ 2019 ಉಲ್ಲೇಖಗಳು ಜಲಪಾತಗಳು ಕರ್ನಾಟಕದ ಪ್ರಮುಖ ಸ್ಥಳಗಳು ಸಾಗರ ತಾಲೂಕಿನ ಪ್ರವಾಸಿ ತಾಣಗಳು ಕರ್ನಾಟಕದ ಜಲಪಾತಗಳು ಕರ್ನಾಟಕದ ಏಳು ಅದ್ಭುತಗಳು
821
https://kn.wikipedia.org/wiki/%E0%B2%95%E0%B3%81%E0%B2%B5%E0%B3%86%E0%B2%82%E0%B2%AA%E0%B3%81
ಕುವೆಂಪು
ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ 'ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು. ಜೀವನ ಬಾಲ್ಯ ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ ೨೯, ೧೯೦೪ ರಲ್ಲಿ ಜನಿಸಿದರು. ತಂದೆ ವೆಂಕಟಪ್ಪ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು. ಶಿಕ್ಷಣ ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ. ಎ. ಪದವಿಯನ್ನೂ ಪಡೆದರು. ಟಿ. ಎಸ್. ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು. ವೃತ್ತಿಜೀವನ ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ಪ್ರಾಂಶುಪಾಲರೂ ಆಗಿದ್ದರು. ನಂತರ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು. ವೈವಾಹಿಕ ಜೀವನ ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ. ನಿಧನ ಕುವೆಂಪು ಅವರು ನವೆಂಬರ್ ೧೧, ೧೯೯೪ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ[ಅವರ] ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ. ಸಾಹಿತ್ಯ ಕೃಷಿ ಕುವೆಂಪು ಅವರು ೨೦ನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದಾರೆ. ಅವರ ಎರಡು ಬೃಹತ್ ಕಾದಂಬರಿಗಳಾದ 'ಕಾನೂರು ಹೆಗ್ಗಡತಿ' ಹಾಗೂ 'ಮಲೆಗಳಲ್ಲಿ ಮದುಮಗಳು' ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ. ಅವರ ನಾಟಕಗಳಿಗೆ ವೈಚಾರಿಕತೆಯ ಸ್ಪರ್ಶವಿದೆ. ಕೃತಿಗಳು ಮಹಾಕಾವ್ಯ ಶ್ರೀ ರಾಮಾಯಣ ದರ್ಶನಂ (೧೯೪೯) ಖಂಡಕಾವ್ಯಗಳು ಚಿತ್ರಾಂಗದಾ (೧೯೩೬) ಕವನ ಸಂಕಲನಗಳು ಕೊಳಲು (೧೯೩೦) ಪಾಂಚಜನ್ಯ (೧೯೩೩) ನವಿಲು (೧೯೩೪) ಕಲಾಸುಂದರಿ (೧೯೩೪) ಕಥನ ಕವನಗಳು (೧೯೩೭) ಕೋಗಿಲೆ ಮತ್ತು ಸೋವಿಯಟ್ ರಷ್ಯಾ (೧೯೪೪) ಪ್ರೇಮ ಕಾಶ್ಮೀರ (೧೯೪೬) ಅಗ್ನಿಹಂಸ (೧೯೪೬) ಕೃತ್ತಿಕೆ (೧೯೪೬) ಪಕ್ಷಿಕಾಶಿ (1946) ಕಿಂಕಿಣಿ (ವಚನ ಸಂಕಲನ) (೧೯೪೬) ಷೋಡಶಿ (೧೯೪೬) ಚಂದ್ರಮಂಚಕೆ ಬಾ ಚಕೋರಿ (೧೯೫೭) ಇಕ್ಷುಗಂಗೋತ್ರಿ (೧೯೫೭) ಅನಿಕೇತನ (೧೯೬೩) ಜೇನಾಗುವ (೧೯೬೪) ಅನುತ್ತರಾ (೧೯೬೫) ಮಂತ್ರಾಕ್ಷತೆ (೧೯೬೬) ಕದರಡಕೆ (೧೯೬೭) ಪ್ರೇತಕ್ಯೂ (೧೯೬೭) ಕುಟೀಚಕ (೧೯೬೭) ಹೊನ್ನ ಹೊತ್ತಾರೆ (೧೯೭೬) ಕೊನೆಯ ತೆನೆ ಮತ್ತು ವಿಶ್ವಮಾನವ ಸಂದೇಶ (೧೯೮೧) ಕಥಾ ಸಂಕಲನ ಸಂನ್ಯಾಸಿ ಮತ್ತು ಇತರ ಕಥೆಗಳು (1936) ನನ್ನ ದೇವರು ಮತ್ತು ಇತರ ಕಥೆಗಳು (1940) ಕಾದಂಬರಿಗಳು ಕಾನೂರು ಹೆಗ್ಗಡತಿ (1936) ಮಲೆಗಳಲ್ಲಿ ಮದುಮಗಳು (1967) ನಾಟಕಗಳು ಯಮನ ಸೋಲು (1928) ಜಲಗಾರ (1928) ಬಿರುಗಾಳಿ (1930) ವಾಲ್ಮೀಕಿಯ ಭಾಗ್ಯ (1931) ಮಹಾರಾತ್ರಿ (1931) ಸ್ಶಶಾನ ಕುರುಕ್ಷೇತ್ರಂ (1931) ರಕ್ತಾಕ್ಷಿ (1933) ಶೂದ್ರ ತಪಸ್ವಿ (1944) ಬೆರಳ್‍ಗೆ ಕೊರಳ್ (1947) ಬಲಿದಾನ (1948) ಚಂದ್ರಹಾಸ (1963) ಕಾನೀನ (1974) ಪ್ರಬಂಧ ಮಲೆನಾಡಿನ ಚಿತ್ರಗಳು (1933) ವಿಮರ್ಶೆ ಕಾವ್ಯವಿಹಾರ (1946) ತಪೋನಂದನ (1950) ವಿಭೂತಿಪೂಜೆ (1953) ದ್ರೌಪದಿಯ ಶ್ರೀಮುಡಿ (1960) ರಸೋ ವೈ ಸಃ (1963) ಇತ್ಯಾದಿ (1970) ಆತ್ಮಕಥೆ ನೆನಪಿನ ದೋಣಿಯಲ್ಲಿ: ಕುವೆಂಪು ಮದುವೆ ಪ್ರಸಂಗ ಜೀವನ ಚರಿತ್ರೆಗಳು ಸ್ವಾಮಿ ವಿವೇಕಾನಂದ ರಾಮಕೃಷ್ಣ ಪರಮಹಂಸ ಅನುವಾದ ಗುರುವಿನೊಡನೆ ದೇವರಡಿಗೆ (ಭಾಗ 1, 2) (1954) ಕೊಲಂಬೋ ಇಂದ ಆಲ್ಮೋರಕೆ ಭಾಷಣ-ಲೇಖನ ಸಾಹಿತ್ಯ ಪ್ರಚಾರ (1930) ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ (1944) ಷಷ್ಠಿನಮನ (1964) ಮನುಜಮತ-ವಿಶ್ವಪಥ (1971) ವಿಚಾರ ಕ್ರಾಂತಿಗೆ ಆಹ್ವಾನ (1976) ಶಿಶು ಸಾಹಿತ್ಯ ಅಮಲನ ಕಥೆ (1924) ಮೋಡಣ್ಣನ ತಮ್ಮ (ನಾಟಕ) (1926) ಹಾಳೂರು (1926) ಬೊಮ್ಮನಹಳ್ಳಿಯ ಕಿಂದರಿಜೋಗಿ (1928) ನನ್ನ ಗೋಪಾಲ (ನಾಟಕ) (1930) ನನ್ನ ಮನೆ (1946) ಮೇಘಪುರ (1947) ಮರಿವಿಜ್ಞಾನಿ (1947) ನರಿಗಳಿಗೇಕೆ ಕೋಡಿಲ್ಲ (1977) ಇತರೆ ಜನಪ್ರಿಯ ವಾಲ್ಮೀಕಿ ರಾಮಾಯಣ ಆಯ್ದ ಸಂಕಲನಗಳು ಕನ್ನಡ ಡಿಂಡಿಮ (1968) ಕಬ್ಬಿಗನ ಕೈಬುಟ್ಟಿ (1973) ಪ್ರಾರ್ಥನಾ ಗೀತಾಂಜಲಿ (1972) ನುಡಿನಮನ ಜ್ಞಾನಪೀಠ ಪ್ರಶಸ್ತಿ ಉಲ್ಲೇಖ ಕುವೆಂಪು ಅವರು ಸಾಹಿತ್ಯ ಬೃಹನ್ಮೂರ್ತಿ; ಕಾವ್ಯಮೀಮಾಂಸೆಯ ಯಾವೂಂದು ಸರಳ ಸೂತ್ರವೂ ಅವರನ್ನು ಸಂಪೂರ್ಣವಾಗಿ ವಿವರಿಸಲಾರದು - ಏಕೆಂದರೆ, ಅವರ ಕೃತಿಗಳು ನಗ್ನ ಸತ್ಯವನೆಂತೊ ಅಂತೇ ಅತೀತ ಸತ್ಯವನ್ನೂ ಅನಾವರಣಗೊಳಿಸುತ್ತವೆ. ಸೃಜನಾತ್ಮಕ ಜೀವನಚರಿತ್ರೆ, ಸಾಹಿತ್ಯ ವಿಮರ್ಶೆ, ಕಾವ್ಯಮೀಮಾಂಸೆ, ನಾಟಕ ಮತ್ತು ಕತೆ ಕಾದಂಬರಿಯ ಕ್ಷೇತ್ರಗಳಿಗೆ ಪುಟ್ಟಪ್ಪನವರ ಕೊಡುಗೆ ಸ್ಮರಣೀಯವಾದುದು. ಅವರದು ವ್ಯಷ್ಠಿ ವಾಣಿಯಲ್ಲ; ಯುಗಧರ್ಮ, ಜನಾಂಗ ಧರ್ಮಗಳ ವಾಣಿ. ಅವರು ಬಹುಕಾಲ ತಮ್ಮ ಸಾಹಿತ್ಯದ ಮೂಲಕ ಚಿರಂಜೀವಿಯಾಗಿ ಇರುತ್ತಾರೆ. ಬಿ.ಎಂ.ಶ್ರೀ. ನೂರು ದೋಷಗಳಿದ್ದರೂ ಕಾವ್ಯವು ಕಾವ್ಯವೇ, ಒಂದು ತಪ್ಪಿಲ್ಲದಿದ್ದರೂ ಜೀವವಿಲ್ಲದ ಕಾವ್ಯ ಕಾವ್ಯವೇ ಅಲ್ಲ, ಪುಟ್ಟಪ್ಪನವರ ಉತ್ತಮ ಕವನಗಳಲ್ಲಿ ಈ ಜೀವವಿದೆ; ಇರುವುದರಿಂದಲೇ ಅವುಗಳಲ್ಲಿ ಅಮೃತತ್ವದ ಸಾರವಿದೆ. ದ.ರಾ.ಬೇಂದ್ರೆ ಯುಗದ ಕವಿಗೆ ಜಗದ ಕವಿಗೆ ಶ್ರೀ ರಾಮಾಯಣ ದರ್ಶನದಿಂದಲೇ ಕೈ ಮುಗಿದ ಕವಿಗೆ – ಮಣಿಯದವರು ಯಾರು? ರಾಮಕೃಷ್ಣ ವಚನೋದಿತ ಪ್ರತಿಭೆ ತೆರೆದ ಕವನ ತತಿಗೆ ತಣಿಯದವರು ಆರು? ಮಲೆನಾಡಿನ ಸೌಂದರ್ಯಕೆ ಕುಣಿದಾಡಿದ ಕವಿಯ ಜತೆಗೆ ಕುಣಿಯದವರು ಆರು? ಕನ್ನಡಿಸಲಿ ಶಿವ ಜೀವನ ಮುನ್ನಡೆಸಲಿ ಯುವ-ಜನ-ಮನ ಇದೆ ಪ್ರಾರ್ಥನೆ ನಮಗೆ ತಮವೆಲ್ಲಿದೆ ರವಿಯಿದಿರಿಗೆ? ಉತ್ತಮ ಕವಿ ನುಡಿ – ಚದುರಗೆ ಚಾರುತ್ವದ ಕುಂದಣದಲಿ ಚಾರಿತ್ರ್ಯದ ರತ್ನ ಚಾತುರ್ಯದ ಮಂತಣದಲಿ ಸತ್ಸಂಗದ ಯತ್ನ ಇದೆ ತೃಪ್ತಿಯು ನಿಮಗೆ ಸ.ಸ.ಮಾಳವಾಡ ಹೊಸಗನ್ನಡ ಸಾಹಿತ್ಯವನ್ನು ಹಲವಂದದಲಿ ಸಿರಿವಂತಗೊಳಿಸಿದ ಧೀಮಂತ ಸಾಹಿತಿ ಕುವೆಂಪು. ಅವರು ಸಾಹಿತ್ಯ ಸೃಷ್ಟಿಯಲ್ಲಿ ಲೌಕಿಕ ಬಾಳಿನಲ್ಲಿ ಉನ್ನತ ಸ್ಥಾನ ಪಡೆದವರಾಗಿದ್ದಾರೆ. ಅವರು ಏಕಾಂತ ಜೀವಿ, ಧ್ಯಾನಶೀಲರು, ಭಾವಸಮಾಧಿಯಲ್ಲಿ ವಿರಮಿಸುವವರು. ಆದರೆ ಕನ್ನಡ ನಾಡು ನುಡಿಗಳ ಹಿತರಕ್ಷಣೆಗಾಗಿ ಸತತವೂ ಹೋರಾಟದಲ್ಲಿ ತೊಡಗಿದವರು. ಜನಸಂಪರ್ಕದಿಂದ ದೂರವುಳಿದರೂ ಜನ ಹಿತಕಾರ್ಯದಿಂದ ವಿಮುಖರಾಗಿಲ್ಲ. ಸನಿಹದಲ್ಲಿ ಅವರನ್ನು ಕಂಡಾಗ ಅವರು ಸ್ನೇಹಪರರು, ಕುಟುಂಬವತ್ಸಲರು ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತದೆ. ಡಿ.ಎಲ್.ನರಸಿಂಹಾಚಾರ್ ಪುಟ್ಟಪ್ಪನವರಂತೆ ಕಾವ್ಯವನ್ನು ಯಾರು ಬರೆಯಬಲ್ಲರು? ಅವರ ಕಾವ್ಯದಲ್ಲಿ ಕಾಣುವ ಮೃದು ಮಧುರ ಪದಬಂಧ, ಬಗೆಯ ಭಾವದ ಐಸಿರಿ, ಭಾವದ ರಸಪ್ರವಾಹ, ಕಾವ್ಯಾಲಂಕಾರ, ಉಕ್ತಿ ಚಮತ್ಕಾರಗಳ ವೈಭವವು ಸಹೃದಯರನ್ನು ರೋಮಾಂಚನಗೊಳಿಸಿ ಸಂತೋಷದ ಕಣ್ಣೀರನ್ನು ಕೋಡಿವರಿಸುತ್ತದೆ. ಪಾಶ್ಚಿಮಾತ್ಯ ಕಾವ್ಯ ವಿಮರ್ಶಕ ಮಾನದಂಡದಿಂದ ಅಳೆದು ನೋಡಿದರೂ ಪುಟ್ಟಪ್ಪನವರು ಮಹಾಕವಿಗಳಾಗಿ ತೇರ್ಗಡೆ ಹೊಂದುತ್ತಾರೆ. ಹಾ.ಮಾ.ನಾಯಕ ಆಧುನಿಕ ಕನ್ನಡ ಸಾಹಿತ್ಯದಲ್ಲಿ ಕುವೆಂಪು ಅವರ ಮಾಂತ್ರಿಕ ಲೇಖನಿ ಅಲಂಕರಿಸದ ಸಾಹಿತ್ಯ ಪ್ರಕಾರವಿಲ್ಲ. ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಹೆಚ್ಚು ಕಡಿಮೆ ಒಂದೇ ಬಗೆಯಾದ ಯಶಸ್ಸನ್ನು ಗಳಿಸಿದ ಲೇಖಕರು ಯಾವುದೇ ಭಾಷೆಯಲ್ಲಾದರೂ ಹೆಚ್ಚಾಗಿ ಸಿಕ್ಕುವುದಿಲ್ಲ. ಆ ಬಗೆಯ ವಿರಳರ ಪಂಕ್ತಿಯಲ್ಲಿ ಕನ್ನಡದ ಕುವೆಂಪು ಒಬ್ಬರೆನ್ನುವುದು ಅಭಿಮಾನದ ಸಂಗತಿ. ಸುಜನಾ ಶ್ರೀ ಕುವೆಂಪು ದರ್ಶನದ ವೈಶಿಷ್ಟ್ಯ ಪರಂಪರೆ-ಯುಗ ಪ್ರಜ್ಞೆಗಳೆರಡರ ಸಮನ್ವಯದಿಂದ ಬಂದದ್ದು. ಈ ಅತಿಶಯ ಸಿದ್ಧಿ ಸಾಹಿತ್ಯಲೋಕದಲ್ಲಿ ವಿರಳ. ಜಿ.ಎಸ್.ಶಿವರುದ್ರಪ್ಪ ಕುವೆಂಪು ಅವರು ಮೂಲತಃ ಕ್ರಾಂತಿಕವಿ. ಸಾಮಾಜಿಕ ಅನ್ಯಾಯಗಳ ಬಗ್ಗೆ ಮೊದಲಿನಿಂದಲೂ ಇವರಷ್ಟು ನಿರ್ಭಯವಾಗಿ ಪ್ರತಿಭಟಿಸಿದ ಕನ್ನಡ ಕವಿ ಲೇಖಕರು ಇಲ್ಲವೇ ಇಲ್ಲ ಎಂದರೂ ಸಲ್ಲುತ್ತದೆ. ಉಚ್ಚ ವರ್ಣದ ಸಮಸ್ತ ಬೌದ್ಧಿಕ ಉಪಕರಣಗಳನ್ನು ಕೈವಶ ಮಾಡಿಕೊಂಡು, ಅವುಗಳನ್ನು ಉಪಯೋಗಿಸಿ ಉಚ್ಚವರ್ಣದ ಮೇಲೆ ಧಾಳಿ ಮಾಡಿದ್ದು, ಮತ್ತು ಅಪ್ರತಿಷ್ಠಿತ ವರ್ಗಕ್ಕೆ ಆತ್ಮಗೌರವನ್ನೂ, ಕೆಚ್ಚನ್ನೂ ತುಂಬುವುದರ ಜತೆಗೆ ಉಚ್ಚ ವರ್ಗದವರೊಂದಿಗೆ ಸಮಸ್ಪರ್ಧಿಯಾಗಿ ನಿಂತದ್ದು ಕುವೆಂಪು ಅವರ ಸಾಹಿತ್ಯಕ ಧೋರಣೆಯ ವಿಶೇಷತೆಯಾಗಿದೆ. ದೇ.ಜ.ಗೌ ಐದು ದಶಕಗಳಿಂದ ಶ್ರೀ ಕುವೆಂಪು ಸಾಹಿತ್ಯ ಕನ್ನಡ ನಾಡಿನ ಜನಮನವನ್ನು ತಣಿಸುತ್ತಾ, ಹುರಿದುಂಬಿಸುತ್ತಾ, ಹಸನುಗೊಳಿಸುತ್ತಿದೆ, ಅವರ ವಿಚಾರಶಕ್ತಿಯನ್ನು ಕೆರಳಿಸುತ್ತಾ, ನಿರಂಕುಶ ಮತಿತ್ವದ ಅವಶ್ಯಕತೆ, ಅನಿವಾರ್ಯತೆಯನ್ನು ನೆನಪಿಗೆ ತಂದುಕೊಡುತ್ತಿದೆ, ಅವರ ಬದುಕಿಗೊಂದು ತಾರಕಮಂತ್ರವಾಗಿ ಧ್ರುವತಾರೆಯಾಗಿ ಸಂಜೀವನಶಕ್ತಿಯಾಗಿ ಅದನ್ನು ತಿದ್ದುತ್ತಿದೆ, ಉನ್ನತಗೊಳಿಸುತ್ತಿದೆ, ಸಚೇತನಗೊಳಿಸುತ್ತಿದೆ, ಪುಷ್ಟಿಗೊಳಿಸುತ್ತಿದೆ. ಸಾವಿರಾರು ವರ್ಷಗಳಿಂದ ಭಾರತೀಯ ಧರ್ಮದ ಸುತ್ತ ಬೆಳೆದುಕೊಂಡು, ಅದರ ಮೂಲ ಸ್ವರೂಪವನ್ನು ಮರೆಸಿರುವ ಮೌಢ್ಯಗಳಿಗೆ ಶುಷ್ಕ ಚಾರಗಳಿಗೆ ಕಂದಾಚಾರದ ಸಂಪ್ರದಾಯಗಳಿಗೆ ಅಗ್ನಿ ಸಂಸ್ಕಾರ ಮಾಡುವಲ್ಲಿ, ಜಾತೀಯತೆಯನ್ನು ಸಾಧ್ಯವಾದಷ್ಟು ತೊಡೆಯುವಲ್ಲಿ, ಪುರೋಹಿತ ಹಾಗೂ ಸಾಮ್ರಾಜ್ಯಶಾಹಿಯನ್ನು ಅಂತ್ಯಗೊಳಿಸುವಲ್ಲಿ ಅದು ಯಶಸ್ವಿಯಾಗಿದೆ. ಭಾರತೀಯರ ಸುಖ ದುಃಖ, ಆಶೆ ಆಕಾಂಕ್ಷೆ, ಕನಸು ನನಸು ಗಳನ್ನು ಪ್ರತಿಬಿಂಬಿಸುವ ಮೂಲಕ ಅವರ ನಾಡಿಯನ್ನು ಮಿಡಿದಿದೆ. ಕೀರ್ತಿನಾಥ ಕುರ್ತಕೋಟಿ ಕುವೆಂಪು ಈ ತಲೆಮಾರಿನ ಹಿರಿಯ ಕವಿಗಳಲ್ಲೊಬ್ಬರಾಗಿದ್ದಾರೆ. ರಚನಾ ಕ್ರಮದಲ್ಲಿ ದೋಷಗಳನ್ನು ತೋರಿಸಬಹುದಾದರೂ ಅವರ ಕಾವ್ಯಶಕ್ತಿ ಸಹಜವಾದದ್ದು. ಅದು ಮುಖ್ಯವಾಗಿ 'ರೊಮ್ಯಾಂಟಿಕ್' ಜಾತಿಯ ಪ್ರತಿಭೆಯಾಗಿದ್ದರಿಂದ ಭಾವಾವೇಶ ಅಲ್ಲಿ ಅನಿವಾರ್ಯವಾಗುತ್ತದೆ. ಆದರೆ ಕುವೆಂಪು ರವರ ಕಾವ್ಯದ ಶ್ರೇಷ್ಠತೆಯಿರುವುದು ಅದು ಸಮಕಾಲೀನ ಜೀವನದ ಎಲ್ಲ ಅಂಶಗಳಿಗೂ ಪ್ರತಿಸ್ಪರ್ಧಿಯಾಯಿತೆಂಬುದೇ. ನಿಸರ್ಗದ ಚೆಲುವು, ದೇಶ ಪ್ರೇಮ, ಆದರ್ಶಪ್ರಿಯತೆ, ಕ್ರಾಂತಿಯ ವೀರಭಾವ, ಆಧ್ಯಾತ್ಮಿಕತೆ ವೊದಲಾದ ಎಲ್ಲ ವಿಷಯಗಳಿಗೂ ಅವರ ಕಾವ್ಯ ಇಂಬುಕೊಟ್ಟಿದೆ. ಹೀಗಾಗಿ ಹೊಸಗನ್ನಡ ಕಾವ್ಯದ ಇತಿಹಾಸದಲ್ಲಿ ಅವರ ಸ್ಥಾನ ಭದ್ರವಾಗಿದೆಯೆಂಬುದರಲ್ಲಿ ಯಾವ ಸಂಶಯವೂ ಇಲ್ಲ. ಕೋ.ಚೆನ್ನಬಸಪ್ಪ ಮೊದಲಿನಿಂದಲೂ ಪುಟ್ಟಪ್ಪನವರ ಪ್ರಮುಖ ಪ್ರವೃತ್ತಿ, ಪ್ರಥಮ ಆಸಕ್ತಿ ಅಧ್ಯಾತ್ಮ. ಅವರು ಜನ್ಮ ತಾಳಿದ್ದು ಇತರ ಕೋಟ್ಯಂತರ ಜನರಂತೆ ಸುಮ್ಮನೆ ಬದುಕಿ, ಬಾಳಿ ಹೋಗಲಿಕ್ಕಲ್ಲ ಎಂಬ ಆತ್ಮ ಪ್ರತ್ಯಯ - ಆತ್ಮಜ್ಞಾನ - ಪುಟ್ಟಪ್ಪನವರಿಗೆ ಚಿಕ್ಕಂದಿನಿಂದಲೇ ಉಂಟಾಗಿತ್ತು. ಆದ್ದರಿಂದ ಮಾನವ ಜನ್ಮೋದ್ದೇಶವಾದ ಆತ್ಮಸಾಕ್ಷಾತ್ಕಾರವೇ ಅವರ ಬಾಳ ಗುರಿ; ಜೀವನೋದ್ದೇಶದ ಆದಿ ಅಂತ್ಯ. ಅವರಿಗೆ ಜೀವನದಲ್ಲಿ ಮತ್ತಾವ ಉಪಾಧಿಗಳೂ ಇರಲಿಲ್ಲ. ಇಂಥ ಅವರ ಜೀವನೋದ್ದೇಶಕ್ಕೆ ನೆರವಾದುದು ಅವರ ಕಾವ್ಯಶಕ್ತಿ. ಅದನ್ನವರು ಎಂದೂ ಮರೆಮಾಚಿಲ್ಲ. ಆದರೂ ಕನ್ನಡ, ಕರ್ನಾಟಕ ಅವರ ಜೀವದ ಎರಡು ಶ್ವಾಸಕೋಶಗಳು. ಆ ಶ್ವಾಸಕೋಶಗಳ ಚಲನೆ ನಿಂತರೆ ಅವರ ಬಾಳುಸಿರೇ ನಿಂತಂತೆ. ಕೆ. ಸಚ್ಚಿದಾನಂದನ್ ಕುವೆಂಪು ಕೇವಲ ಕರ್ನಾಟಕದವರಲ್ಲ, ಭಾರತದ ಮಹಾ ಲೇಖಕ. ಅವರ 'ರಾಮಾಯಣ ದರ್ಶನಂ' ಆಧುನಿಕ ಭಾರತೀಯ ಸಾಹಿತ್ಯದ ಶ್ರೇಷ್ಠ ಕೃತಿ. ಇಲ್ಲಿ ಬರುವ ರಾಮ, ಸೀತೆ ಯೊಂದಿಗೆ ಅಗ್ನಿ ಪ್ರವೇಶ ಮಾಡುತ್ತಾನೆ. ಎಲ್ಲೆಡೆ ಮಹಿಳೆಯ ಮೇಲೆ ದೌರ್ಜನ್ಯ, ಹಿಂಸೆಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಕುವೆಂಪು ಕಟ್ಟಿಕೊಟ್ಟ ಈ ಚಿತ್ರಣ ಪ್ರಸ್ತುತ ಮತ್ತು ಆದರ್ಶ. ಅವರ ಶೂದ್ರ ತಪಸ್ವಿ ನಾಟಕ, ಶೋಷಣೆ ಮತ್ತು ತಾರತಮ್ಯದ ವರ್ಣ ನೀತಿಗೆ ಮುಖಾಮುಖಿಯಾದ ನಾಟಕ. ಸಾರ್ವಕಾಲಿಕ ಕಾವ್ಯ ಮೀಮಾಂಸೆಯ ಅಧ್ವರ್ಯುಗಳಲ್ಲಿ ಕುವೆಂಪು ಒಬ್ಬರು. ತಾವು ನಂಬಿದ ಕಾವ್ಯ ತತ್ವವನ್ನು ತಮ್ಮ 'ರಸೋ ವೈ ಸಃ'ದಲ್ಲಿ ಹೇಳಿದ್ದಾರೆ. ಕನ್ನಡಕ್ಕೆ ಹೊಸ ನುಡಿಗಟ್ಟು ಮತ್ತು ಹೊಸ ಕಲ್ಪನೆಗಳನ್ನು ನೀಡಿದವರು. ಕಲ್ಪನಾಶಕ್ತಿಯೊಂದಿಗೆ, ಬೌದ್ಧಿಕ ಸಾಮರ್ಥ್ಯವನ್ನು ಮೇಳೈಸಿ, ನೈತಿಕ ಮತ್ತು ಸೌಂದರ್ಯ ಮೀಮಾಂಸೆಯನ್ನು ಉನ್ನತ ಸ್ಥಾನಕ್ಕೆ ಒಯ್ದವರು. ಸ್ಮಾರಕಗಳು ಕುಪ್ಪಳಿಯಲ್ಲಿರುವ ಕುವೆಂಪು ಅವರು ಹುಟ್ಟಿದ ಮನೆ ವಸ್ತು ಸಂಗ್ರಹಾಲಯವಾಗಿದೆ. ಅಲ್ಲೇ ಇರುವ ಅವರ ಸಮಾಧಿ ಸ್ಥಳವಾದ 'ಕವಿಶೈಲ' ಒಂದು ವಿಶಿಷ್ಟ ಸ್ಮಾರಕ. ಶಿವಮೊಗ್ಗದ ಬಳಿ ಇರುವ ವಿಶ್ವವಿದ್ಯಾಲಯಕ್ಕೆ ಕುವೆಂಪು ಅವರ ಹೆಸರಿಡಲಾಗಿದೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿರುವ ಕನ್ನಡ ಅಧ್ಯಯನ ಸಂಸ್ಥೆಗೆ ಕುವೆಂಪು ಅವರ ಹೆಸರಿಡಲಾಗಿದೆ. ಅನುವಾದ ಕಾರ್ಯವನ್ನು ಪ್ರೋತ್ಸಾಹಿಸಲು ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ ಭಾಷಾ ಭಾರತಿ ಸಂಸ್ಥೆಗೆ ಕುವೆಂಪು ಅವರ ಹೆಸರಿಡಲಾಗಿದೆ. ಮೈಸೂರಿನ ಕುವೆಂಪು ನಗರದಲ್ಲಿರುವ ರಸ್ತೆಗಳಿಗೆ ಕುವೆಂಪು ಅವರ ಪರಿಕಲ್ಪನೆಗಳ, ಪಾತ್ರಗಳ ಹೆಸರುಗಳನ್ನು ಇಡಲಾಗಿದೆ. ಕುವೆಂಪು ಕುರಿತ ಕೃತಿಗಳು ಮಗಳು ಕಂಡ ಕುವೆಂಪು - ಲೇ: ತಾರಿಣಿ ಚಿದಾನಂದ ಪ್ರಕಾಶಕರು:ಪುಸ್ತಕ ಪ್ರಕಾಶನ ಅಣ್ಣನ ನೆನಪು - ಲೇ: ಕೆ ಪಿ ಪೂರ್ಣಚಂದ್ರ ತೇಜಸ್ವಿ ಪ್ರಕಾಶಕರು:ಪುಸ್ತಕ ಪ್ರಕಾಶನ ಕುವೆಂಪು - ಲೇ: ದೇಜಗೌ ಯುಗದ ಕವಿ - ಲೇ: ಡಾ.ಕೆ.ಸಿ.ಶಿವಾರೆಡ್ಡಿ ಹೀಗಿದ್ದರು ಕುವೆಂಪು - ಲೇ: ಪ್ರಭುಶಂಕರ ಕುವೆಂಪು - ಲೇ: ಎಸ್.ವಿ.ಪರಮೇಶ್ವರಭಟ್ಟ ಶ್ರೀ ಕುವೆಂಪು ಸಂಭಾಷಣೆ ಮತ್ತು ಸಂದರ್ಶನ - ಲೇ: ಎಸ್.ವೃಷಭೇಂದ್ರಸ್ವಾಮಿ ತರಗತಿಗಳಲ್ಲಿ ಕುವೆಂಪು - ಲೇ: ಎಸ್.ವೃಷಭೇಂದ್ರಸ್ವಾಮಿ ಕುವೆಂಪು ಕಾವ್ಯಯಾನ - ಲೇ: ಬಿ.ಆರ್. ಸತ್ಯನಾರಾಯಣ ಕುವೆಂಪು ನುಡಿತೋರಣ - ಸಂ: ಬಿ.ಆರ್.ಸತ್ಯನಾರಾಯಣ ನಾಟಕ-ಚಲನಚಿತ್ರ-ಧಾರಾವಾಹಿ "ಬೆರಳ್‌ಗೆ ಕೊರಳ್" ನಾಟಕವು ಚಲನಚಿತ್ರವಾಗಿದೆ. "ಕಾನೂರು ಹೆಗ್ಗಡಿತಿ" ಕಾದಂಬರಿ ಚಲನಚಿತ್ರವಾಗಿದೆ. "ಮಲೆಗಳಲ್ಲಿ ಮದುಮಗಳು" ಕಾದಂಬರಿ ಧಾರಾವಾಹಿಯಾಗಿದೆ ಹಾಗೂ ೯ ಗಂಟೆಗಳ ಅವಧಿಯ ನಾಟಕವಾಗಿಯೂ ಮೈಸೂರಿನ ರಂಗಾಯಣದಲ್ಲಿ ಮತ್ತು ಬೆಂಗಳೂರಿನ ಕಲಾಗ್ರಾಮದಲ್ಲಿ ಪ್ರದರ್ಶನಗೊಂಡಿದೆ. ಕೊಡುಗೆ ಕುವೆಂಪು ಅವರು ಯುಗಪ್ರವರ್ತಕ ಕವಿ. ಕುವೆಂಪು ಅವರು 'ಶ್ರೀ ರಾಮಾಯಣ ದರ್ಶನಂ' ರಚಿಸುವ ಮೂಲಕ ಆಧುನಿಕ ಕಾಲದಲ್ಲಿ ಮಹಾಕಾವ್ಯ ರಚನೆಗೆ ನಾಂದಿ ಹಾಡಿದರು. ಕುವೆಂಪು ಅವರು ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಹೊಸ ಕಾಲಕ್ಕೆ ಅಗತ್ಯವೆನ್ನಿಸಿದ ದರ್ಶನವನ್ನು ಕಟ್ಟಿಕೊಟ್ಟಿದ್ದಾರೆ. ಕುವೆಂಪು ಅವರು ವಿಶ್ವಮಾನವ ಸಂದೇಶ ನೀಡಿದ್ದಾರೆ. ಕುವೆಂಪು ಅವರು ಮಂತ್ರಮಾಂಗಲ್ಯ ಎಂಬ ಸರಳ ವಿವಾಹ ಪದ್ಧತಿಯನ್ನು ರೂಢಿಗೆ ತಂದರು. ಕುವೆಂಪು ಅವರು ತಮ್ಮ ಕನಸಿನ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದ್ದಾರೆ. ಕುವೆಂಪು ಅವರು ದಲಿತ ಹಾಗೂ ಬಂಡಾಯ ಚಳವಳಿಗಳಿಗೆ ಸ್ಫೂರ್ತಿಯಾಗಿದ್ದಾರೆ. 1985ರಲ್ಲಿ ಮೈಸೂರಿನಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನವನ್ನು ಉದ್ಘಾಟಿಸಿದರು. ಗೌರವ/ ಪ್ರಶಸ್ತಿ ಪುರಸ್ಕಾರಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ - (ಶ್ರೀರಾಮಾಯಣ ದರ್ಶನಂ) (1955) ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್. (1956) ಪದ್ಮಭೂಷಣ (೧೯೫೮) ರಾಷ್ಟ್ರಕವಿ ಪುರಸ್ಕಾರ (೧೯೬೪) ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೬) ಜ್ಞಾನಪೀಠ ಪ್ರಶಸ್ತಿ (ಶ್ರೀ ರಾಮಾಯಣ ದರ್ಶನಂ) (೧೯೬೮) ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಿ.ಲಿಟ್. (೧೯೬೯) ಕೇಂದ್ರ ಸಾಹಿತ್ಯ ಅಕಾಡೆಮಿಯು ಫೆಲೋಷಿಪ್ (1979) ಪಂಪ ಪ್ರಶಸ್ತಿ (೧೯೮೮) ಪದ್ಮವಿಭೂಷಣ (೧೯೮೮) ಕರ್ನಾಟಕ ರತ್ನ (೧೯೯೨) ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸದಸ್ಯತ್ವ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ (ಮರಣೋತ್ತರ) ಕುವೆಂಪು ಅವರ 113 ನೇ ಜನ್ಮ ದಿನದಂದು, ಗೂಗಲ್ ಇಂಡಿಯಾ ಅವರ ಗೌರವಾರ್ಥ ಡೂಡಲ್ ಪ್ರದರ್ಶಿಸಿತು.(2017 ಡಿಸೆಂಬರ್ 29) ಅಧ್ಯಕ್ಷತೆ, ಇತ್ಯಾದಿ 1928ರಲ್ಲಿ ಸೆಂಟ್ರಲ್ ಕಾಲೇಜು ಕರ್ಣಾಟಕ ಸಂಘದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಕವಿ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷರಾಗಿದ್ದರು. 1957ರಲ್ಲಿ ನಡೆದ 39ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ವಿಶ್ವ ಮಾನವ ದಿನ ಕರ್ನಾಟಕ ಸರ್ಕಾರವು ೨೦೧೫ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್‌ ೨೯ ಅನ್ನು "ವಿಶ್ವ ಮಾನವ" ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಈ ಮೂಲಕ ವಿಶ್ವಮಾನವ ಸಂದೇಶ ಸಾರಿದ ಕವಿಗೆ ಮತ್ತೊಂದು ಗೌರವ ಸಂದಾಯವಾದಂತಾಯ್ತು. ಹೊರಗಿನ ಸಂಪರ್ಕಗಳು ಕುವೆಂಪು ಅವರ ಅಧಿಕೃತ ತಾಣ (ಉದಯರವಿ ಪ್ರಕಾಶನ) NIC ಪುಟದಲ್ಲಿ ಕುವೆಂಪು ವಿಚಾರಮಂಟಪ.ನೆಟ್ http://kannadaratna.com/achievers/kuvempu.html ಕುವೆಂಪು ವಿಶ್ವವಿದ್ಯಾನಿಲಯ - ಶಿವಮೊಗ್ಗ ಪೂರ್ಣಚಂದ್ರ ತೇಜಸ್ವಿ ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಪುಟ್ಟಪ್ಪ ಕೆ ವಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು ೧೯೦೪ ಜನನ ೧೯೯೪ ನಿಧನ ಪಂಪ ಪ್ರಶಸ್ತಿ ಪುರಸ್ಕೃತರು ಕರ್ನಾಟಕದ ಏಕೀಕರಣಕ್ಕಾಗಿ ದುಡಿದ ಮಹನೀಯರು ಕವಿಗಳು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಮೈಸೂರಿನ ಬರಹಗಾರರು ಉಲ್ಲೇಖಗಳು
828
https://kn.wikipedia.org/wiki/%E0%B2%9F%E0%B2%BF.%E0%B2%AA%E0%B2%BF.%E0%B2%95%E0%B3%88%E0%B2%B2%E0%B2%BE%E0%B2%B8%E0%B2%82
ಟಿ.ಪಿ.ಕೈಲಾಸಂ
ಟಿ.ಪಿ.ಕೈಲಾಸಂ "ನಕ್ಕು ನಗಿಸುವಾತ ಸಾವಿರ್ಜನಕ್ತ್ರಾತ" ."ಕರ್ನಾಟಕ ಪ್ರಹಸನ ಪಿತಾಮಹ". ತಂಜಾವೂರು ಪರಮಶಿವ ಕೈಲಾಸಂ ಕನ್ನಡದ ಜನರ ಮನ ಮನೆಗಳಲ್ಲಿ ಚಿರಕಾಲ ಉಳಿಯುವ, ಜನಪ್ರಿಯ ಹೆಸರು. ಇವರು ಕನ್ನಡ ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಆಧುನಿಕ ಕನ್ನಡ ರಂಗಭೂಮಿಯ ಹರಿಕಾರರೆಂದೇ ಕರೆಯಲ್ಪಟ್ಟ ಇ‌ವರ ಹಾಸ್ಯ ಚಟಾಕಿಗಳು ಇಂದಿಗೂ ಜನರನ್ನು ನಗಿಸುತ್ತಾ ನಲಿಸುತ್ತಾ ಇವೆ. ಕನ್ನಡ ರಂಗಭೂಮಿಯನ್ನು ಸಾಂಪ್ರದಾಯಿಕತೆಯ ಸಂಕೋಲೆಗಳಿಂದ ಹೊರಗೆಳೆದು ತಂದು ಅದಕ್ಕೆ ಹೊಸ ತಿರುವನ್ನು ಆಯಾಮಗಳನ್ನು ತಂದು ಕೊಟ್ಟವರು. ಬಾಲ್ಯ ಜೀವನ ಕೈಲಾಸಂರವರು (೨೯.೦೭.೧೮೮೪-೧೯೪೬) ಮೈಸೂರು ರಾಜ್ಯದಲ್ಲಿ ಸರ್ಕಾರಿ ಸೇವೆಯಲ್ಲಿದ್ದ ತಮಿಳು ಮೂಲದ ಮನೆತನದಿಂದ ಬಂದವರು. ಅವರ ತಂದೆ ಆಗಿನ ಕಾಲಕ್ಕೆ ಬಹು ದೊಡ್ಡ ಹೆಸರು ಮಾಡಿದ್ದ ಜಸ್ಟಿಸ್ ಪರಮಶಿವ ಅಯ್ಯರ್, ತಾಯಿ ಕಮಲಮ್ಮ. ಬೆಂಗಳೂರಿನಲ್ಲಿ ಹುಟ್ಟಿದ ಕೈಲಾಸಂ ಅವರ ಬಾಲ್ಯ ಜೀವನ ಅತ್ಯಂತ ಶಿಸ್ತಿನಿಂದ ಕಳೆಯಿತು. ವಿದ್ಯಾಭ್ಯಾಸ ನಡೆದುದು ಬೆಂಗಳೂರು, ಮೈಸೂರು, ಹಾಸನಗಳಲ್ಲಿ. ಮೆಟ್ರಿಕ್ಯುಲೇಷನ್ ಪಾಸು ಮಾಡಿದ್ದು ಮದರಾಸಿನ ಹಿಂದು ಹೈಸ್ಕೂಲಿನಲ್ಲಿ. ಮುಂದೆ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಭೂವಿಜ್ಞಾನ ಓದಿ ಬಿ.ಎ. ಪದವಿ. ಎಂ.ಎ.ಪದವಿಗಳನ್ನು ಪಡೆದು ಸರಕಾರದ ವಿದ್ಯಾರ್ಥಿವೇತನದೊಂದಿಗೆ ಲಂಡನ್ನಿಗೆ ತೆರಳಿ ರಾಯಲ್ ಕಾಲೇಜ್ ಆಫ್ ಸೈನ್ಸ್ ಸೇರಿ ಏಳು ವಿಷಯಗಳಲ್ಲಿ ಮೊದಲ ದರ್ಜೆಯಲ್ಲದೆ ಪ್ರಶಸ್ತಿಗೂ ಭಾಜನರಾದರು. ರಾಯಲ್ ಜಿಯಾಲಜಿಕಲ್ ಸೊಸೈಟಿಗೆ ಪ್ರಬಂಧ ಸಲ್ಲಿಸಿ ಫೆಲೋಷಿಪ್ ಪಡೆದರು. ಜ್ಞಾನಾರ್ಜನೆಯಂತೆ ಕ್ರೀಡೆಯಲ್ಲೂ ಆಸಕ್ತಿ. ಫುಟ್‌ಬಾಲ್‌ನಲ್ಲಿ ಅಜೇಯ ಗೋಲ್ ಕೀಪರ್. ಯೂಜಿನ್ ಸ್ಯಾಂಡೋರ ನೆಚ್ಚಿನ ಶಿಷ್ಯರಾಗಿ ವ್ಯಾಯಾಮ ಪಟುವಾಗಿದ್ದರು. ನಾಟಕಕಾರರಾಗಿ ಇಂಗ್ಲೆಂಡಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಜಾರ್ಜ್ ಬರ್ನಾಡ್ ಶಾ ಅವರ ನಾಟಕಗಳು ಕೈಲಾಸಂರವರ ಮೇಲೆ ಅಪಾರ ಪ್ರಭಾವ ಬೀರಿದ್ದವು. ಅದೇ ತಂತ್ರಗಾರಿಕೆ ಬಳಸಿ ಹಲವು ನಾಟಕಗಳನ್ನು ರಚಿಸಿದರು. ರವೀಂದ್ರನಾಥರು ಬೆಂಗಳೂರಿಗೆ ಬಂದಾಗ ಅವರ ಸಮ್ಮುಖದಲ್ಲಿ ಪ್ರದರ್ಶಿಸಿದ ನಾಟಕ ಟೊಳ್ಳುಗಟ್ಟಿ ಪ್ರಥಮ ಬಹುಮಾನ ಗಳಿಸಿತಲ್ಲದೆ ಕನ್ನಡ ರಂಗಭೂಮಿಯಲ್ಲಿ ಕ್ರಾಂತಿ ಎಬ್ಬಿಸಿತು. ಕೃತಿಗಳು ನಾಟಕಗಳು ಟೊಳ್ಳುಗಟ್ಟಿ ಅಥವಾ ಮಕ್ಕಳಸ್ಕೂಲ್ ಮನೇಲಲ್ವೇ! ಹೋಂರೂಲು, ಬಹಿಷ್ಕಾರ, ಗಂಡಸ್ಕತ್ರಿ, ನಮ್ ಬ್ರಾಹ್ಮಣ್ಕೆ, ಬಂಡ್ವಾಳಿಲ್ಲದ ಬಡಾಯಿ, ನಮ್ ಕ್ಲಬ್ಬು, ಅಮ್ಮಾವ್ರಗಂಡ, ಸತ್ತವನ ಸಂತಾಪ, ಅನುಕೂಲಕ್ಕೊಬ್ಬಣ್ಣ, ಸೀಕರ್ಣೆ ಸಾವಿತ್ರಿ, ಶೂರ್ಪನಖಾ ಕುಲವೈಭವ ಅಥವಾ ನಂಕಂಪ್ನಿ, ತಾಳಿ ಕಟ್ಟೋಕ್ಕೂಲೀನೇ, ಪೋಲಿಕಿಟ್ಟಿ, ವೈದ್ಯನವ್ಯಾಧಿ, ಸೂಳೆ . -ಮೊದಲಾದ ನಾಟಕಗಳ ಜೊತೆಗೆ ನಾಲ್ಕು ಇಂಗ್ಲಿಷ್ ನಾಟಕಗಳೂ ರಚನೆಯಾದವು. (ಟೊಳ್ಳುಗಟ್ಟಿ; BY ಕೈಲಾಸಂ ಟಿ ಪಿಪೋಲೀ ಕಿಟ್ಟಿ. BY ಕೈಲಾಸಂ ಟಿ ಪಿ) ಕಥೆಗಳು ತಾವರೆಕೆರೆ ಸಮಶ್ಪೋಯಿನ ದಂಬ್ಡಿ ಮುದ್ದೋ ಇಲ್ಲಾ ಕದ್ದೋ ಸುಂಕದ ಕಟ್ಟೆ ಶಾಮಿಯ ಸೇಡು ಕವನಗಳು ತಿಪ್ಪಾರಳ್ಳಿ ಕೋಳಿಕೆ ರಂಗ ನಂಜಿ ನನ್ ಅಪರಂಜಿ ಕಾಶಿಗ್ ಹೋದ ನಂ ಬಾವ ಬೋರನ ಭಾರ ಅಲ್ಪಜ್ಞನ ಪದ ಅರಿವು ಇಂಗ್ಲಿಷ್ ಕವನಗಳು ದಿ ಡ್ರಮಾಟಿಸ್ಟ್ (The Dramatist) ಎಟೆರ್ನಲ್ ಕೆಯಿನ್ (Eternal Cain) ಟ್ರುತ್ ನೆಕೆಡ್ (Truth Naked) ದಿ ಲೇಕ್ (The Lake) ಕೈಕೇಯೀ ದ್ರೋಣ ಕಮಿಸರೇಶನ್ (Commiseration) ಮದರ್-ಲವ್ (Mother-Love) ದಿ ಸಿಕ್ಸತ್ ಕಾಲಮಿಸ್ಟ್ ೧೯೪೩ (The Sixth columnist 1943) ಎ ಮೋನೋಲಾಗ್ (A Monolougue) ದಿ ರೆಸಿಪಿ (The Recipe) ದಿ ಸ್ಮಿಲಿನ್ ಸೆವೆನ್ ೧೯೩೦ (The Smilin' Seven 1930) ಕೃಷ್ಣ (Krishna) ಸುಭದ್ರಾ (Subhadra) ದಿ ಆರ್ಟಿಸ್ಟ್ (The Artist) ಇಂಗ್ಲಿಷ್ ನಾಟಕಗಳು ದಿ ಬರ್ಡನ್ (The Burden) ಫುಲ್ಫಿಲ್ಮೆಂಟ್ (Fulfilment) ದಿ ಪರ್ಪಸ್ (The Purpose) ದಿ ಬ್ರಾಹ್ಮಿನ್ಸ್ ಕರ್ಸ್ (The Brahmin's Curse)(Karna ; Murder of Mercy?) ಕೈಲಾಸಂ ಎಂದೂ ಪೆನ್ನು ಹಿಡಿದವರಲ್ಲ. ಕನ್ನಡಾಂಗ್ಲಾ ಭಾಷೆಯಲ್ಲಿ ಹೇಳಿದ್ದನ್ನು ಸ್ನೇಹಿತರು ಬರೆದು ಕೊಂಡರು. ಅವರ 'ಕೋಳಿಕೆ ರಂಗ' ಕವನ ಅವರು ಇಂಗ್ಲೆಂಡಿನಲ್ಲಿದ್ದಾಗ 'ಕಾನ್ಸ್ಟಂಟಿನೊಪಲ್' ಕವನವನ್ನು ಒಬ್ಬ ಇಂಗ್ಲಿಷ್ ಸಂಗೀತಗಾರ ಹೊಸ ರಾಗದಲ್ಲಿ ಹಾಡಿ, ಇದೇ ರಾಗದಲ್ಲಿ ಬೇರೆ ಹಾಡು ಹಾಡಿದರ ಅವರಿಗ ಬಹುಮಾನ ಕೊಡುವುದಾಗಿ ಸವಾಲು ಹಾಕುತ್ತಾನೆ. ಆಗ ಕೈಲಾಸಂ ಅದೇರಾಗದಲ್ಲಿ 'ಕೋಳಿಕೆ ರಂಗಾ' ಹಾಡು ಹೇಳಿ ಬಹುಮಾನ ಗಿಟ್ಟಿಸಿಕೊಳ್ಳುತ್ತಾರೆ ಎಂದು ಕಥೆ ಇದೆ(ಪ್ರತಿ ೬ಗ್ರಾಂ ಗಳ ೧೦ ಪೌಂಡು). ಆ ಹಾಡು ಹೀಗಿದೆ (ಸುಮಾರು ೧೯೨೦ ರಲ್ಲಿ ರಚನೆ.) ಕೋಳಿಕೆ ರಂಗ ನಾನು ಕೋಳಿಕೆ ರಂಗ ‘ಕೋ’ನು ‘ಳಿ’ನು ‘ಕೆ’ನು ‘ರ’ನು ಸೊನ್ನೆ ಗ ಕಕೋತ್ವ ಳಿ ಕಕೆತ್ವ ರ ಮತ್ ಸೋನ್ನೆಯುನು ಗ ಇದ್ನ ಹಾಡೋಕ್ ಬರ್ದೆ ಬಾಯ್ ಬಿಡೋವ್ನು ಹಃ ಹಃ ಹಃ ಬೆಪ್ಪು ನನ್ ಮಗ ನಾನು ಕೋಳಿಕೆ ರಂಗ ‘ಕೋ’ನು ‘ಳಿ’ನು ‘ಕೆ’ನು ‘ರ’ನು ಸೊನ್ನೆ ಗ ಕಕೊತ್ವ ಳಿ ಕಕೆತ್ವ ರ ಮತ್ ಸೋನ್ನೆಯುನು ಗ ನಮ್ಮ ತಿಪ್ಪಾರಳ್ಳಿ ಬೋರನ್ ಅಣ್ಣನ್ ತಮ್ಮನ್ ದೊಡ್ಡ್ ಮಗ ನಾ ಹುಟ್ಟಿದ್ ದೊಡ್ದ್ರಳ್ಳಿ, ಬೆಳ್ದಿದ್ ಬ್ಯಾಡ್ರಳ್ಳಿ, ಮದುವೆ ಮಾರ್ನಳ್ಳಿ ಬೆಳೆಗಳ್ ಹಾರ್ನಳ್ಳಿ; ನಮ್ ಶಾನ್ಬ್ಹೊಗಯ್ಯ, ಅಲ್ದೆ ಶೆಕ್ದಾರಪ್ಪ ಇವ್ರೆಲ್ರು ಕಂಡವ್ರೆ ನನ್ನಾ. ಹೆಂಡರ್ನು ಮಕ್ಕಳ್ನು ಬಿಟ್ಟು, ಹಟ್ಟಿ ಅದನ್ನು ಬಿಟ್ಟು, ಬಂದಿವ್ನಿ ನಾ, ನಿಮ್ಮುಂದೆ ನಿಂತಿವ್ನಿ ನಾ ನಂಹಳ್ಳಿ ಕಿಲಾಡಿ ಹುಂಜಾ! ನಾನು ಕೋಳಿಕೆ ರಂಗ ‘ಕೋ’ನು ‘ಳಿ’ನು ‘ಕೆ’ನು ‘ರ’ನು ಸೊನ್ನೆ ಗ ಕಕೋತ್ವ ಳಿ ಕಕೆತ್ವ ರ ಮತ್ ಸೋನ್ನೆಯುನು ಗ ಇದ್ನ ಹಾಡೋಕ್ ಬರ್ದೆ ಬಾಯ್ ಬಿಡೋವ್ನು ಹಃ ಹಃ ಹಃ ಬೆಪ್ಪು ನನ್ ಮಗ ಎತ್ತಿಲ್ಲದ್ ಬಂಡಿಗಳುವೆ ಎಣ್ಣೆಲ್ಲದ್ ದೀಪಗಳುವೆ, ತುಂಬಿದ್ ಮೈಸೂರಿಗ್ ಬಂದೆ; ದೊಡ್ಡ್ ಚೌಕದ ಮುಂದೆ, ದೊಡ್ಡ್ ಗಡಿಯಾರದ ಹಿಂದೆ ಕಟ್ ತಂದಿದ್ ಬುತ್ತಿನ್ ತಿಂತಿದ್ದೆ. ಅಲ್ ಕುದ್ರೆಮೇಲ್ ಕುಂತಿದ್ದೊಬ್ಬ್ ಸವಾರಯ್ಯ, ಕೆದ್ರಿದ್ ತನ್ ಮೀಸೆಮೇಲ್ ಹಾಕ್ದ ತನ್ ಕೈಯ್ಯ, ಕೇಳ್ತಾನ್ ನನ್ನಾ ಗದ್ರುಸ್ತಾಲಿ ಬೆದ್ರುಸ್ತಾಲಿ “ಲೇ, ಯಾರೋ ಯಾಕೋ ಇಲ್ಲಿ” ಅಂತ! ಹಃ ನಾನು.. ನಾನು ಕೋಳಿಕೆ ರಂಗ ‘ಕೋ’ನು ‘ಳಿ’ನು ‘ಕೆ’ನು ‘ರ’ನು ಸೊನ್ನೆ ಗ ಕಕೊತ್ವ ಳಿ ಕಕೆತ್ವ ರ ಮತ್ ಸೋನ್ನೆಯುನು ಗ ಇದ್ನ ಹಾಡೋಕ್ ಬರ್ದೆ ಬಾಯ್ ಬಿಡೋವ್ನು ಬೆಪ್ ನನ್ ಮಗ. - ಟಿ. ಪಿ. ಕೈಲಾಸಂ* ಕನ್ನಡಕ್ಕೊಬ್ನೆ ಕೈಲಾಸಂ ಕೈಲಾಸಂ ಅವರು ೧೯೪೫ರಲ್ಲಿ ಮದರಾಸಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾಡಿದ ಭಾಷಣ ಇಡೀ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣಗಳಲ್ಲೆಲ್ಲಾ ಅತ್ಯಂತ ಚಿಕ್ಕದೆಂದು, ಜೊಕ್ಕವಾಗಿತ್ತೆಂದೂ ಪ್ರಸಿದ್ಧವಾಗಿದೆ. ಏಕೆಂದರೆ ಅದರಲ್ಲಿ ಪದೇ ಪದೇ ಹೇಳಿದ್ದನ್ನೇ ಹೇಳುವ ಪರಿಪಾಠವಿರಲಿಲ್ಲ. ಪ್ರತಿಪದ, ಪ್ರತಿವಾಕ್ಯಗಳೂ ಮೊದಲೇ ನಿರ್ಧಾರಿತವಾಗಿದ್ದು, ಸಭಿಕರಿಗೆ ಮತ್ತು ಆ ದಿನದ ಸನ್ನಿವೇಶಕ್ಕೆ ಬೇಕಾದ್ದನ್ನು ಮಾತ್ರ ಹೇಳಿದ್ದರಿಂದ ಇದು ಎಲ್ಲರಿಗೂ ಅತ್ಯಂತ ಪ್ರಿಯವಾಯಿತು. ಅತಿ ಕ್ಲುಪ್ತ, ಮತ್ತು ಪ್ರಭಾವಿ ಭಾಷಣಕ್ಕೆ , ಮಾತುಕತೆಗೆ ಅವರು ಪ್ರಸಿದ್ಧರಾಗಿದ್ದರು. ಮೊದಲ ತಯಾರಿಯಿಲ್ಲದೆ ಯಾವ ಸಮಾರಂಭಕ್ಕೂ ಅವರು ಹೋಗುತ್ತಿರಲಿಲ್ಲ. ಕನ್ನಡಕ್ಕೊಬ್ನೆ ಕೈಲಾಸಂ’, ಎಂದು ಎಲ್ಲರ ಕೈಲೂ, ಭೇಷ್ ಎನ್ನಿಸಿಕೊಂಡ ಕೈಲಾಸಂ, ಕನ್ನಡ ಸಾರಸ್ವತ ಲೋಕಕ್ಕೆ ಕೊಟ್ಟ ಕೊಡುಗೆ ಅನನ್ಯ! ಯಾರೋ ಅವರನ್ನು ಸಂಬೋಧಿಸಿ, ಟಿ.ಪಿ.ಕೈಲಾಸ್,ಎಂದಾಗ ತಮ್ಮನ್ನು ತಾವೆ, ಟಿಪಿಕಲ್ ಆಸ್, ಎಂದು ಕರೆದುಕೊಂಡು, ನಗೆ ಯಾಡಿದ್ದರಂತೆ. ಪಾಶ್ಚಾತ್ಯ ಸಂಗೀತಾಸಕ್ತರಾಗಿ ಅವರು ಇಂಗ್ಲಿಷ್ ರಾಗಕ್ಕೆ ಕನ್ನಡದಲ್ಲಿ ಹಾಡು ಬರೆದು ಕೇಳುಗರಿಗೆ ಅಚ್ಚರಿ ಹುಟ್ಟಿಸುತ್ತಿದ್ದರಂತೆ. ಕೈಲಾಸಂರ ಪದ್ಯದ ತುಣುಕೊಂದು ಹೀಗಿದೆ. "ಕಲ್ಲಲ್ಲಿ ಸಿಗುವುದೇ ಕಲ್ಲಿದ್ದಿಲೆಂದೆನಿಸಿ ಕಲ್ಲನ್ನು ಕೊರೆಯಲು--ಎಲ್ಲೆಲ್ಲಿ ಕೊರೆದರೂ ಕಲ್ಲಲ್ಲದೊಂದಿಲ್ಲ ! ಬಲ್ಲೆ-- ಕಲ್ಲೇ ಇದ್ದಿಲೆಂದನಲ್ಪಜ್ಞ ". ಕೈಲಾಸಂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ಭಾಷಣದ ಕೊನೆಯಲ್ಲಿ ಹೇಳಿದ ಇಂಗ್ಲಿಷ್ ಕವನದ ಕನ್ನಡಾನುವಾದ ಹೀಗಿದೆ, "ಹೊನ್ನೆ ? ಬಲ್ ಬಿರುದುಗಳೆ ? ಹಾಲುಗಲ್ ವಿಗ್ರಹವೆ ? ಕವಿ ಬಯಸನಿಂಥದೇ ಪ್ರತಿಫಲವೆ ಬೇಕು ! ಹಿರಿಯರುಂ ಕಿರಿಯರುಂ ಕಿಲಕಿಲನೆ ನಕ್ಕೆರೆಡು ಕಣ್ಣ ಹನಿಯಿತ್ತರೆನಗದು ಅನಿತೆ ಸಾಕು" !.(ಕಣ್ಣ ಹನಿಯಿತ್ತರೆ+ ಎನಗದು ಅನಿತೆ ಸಾಕು") ನಿಧನ ಕೂತಲ್ಲಿ ಕಂಪನಿ…ನಿಂತಲ್ಲಿ ನಾಟ್ಕ ಎಂದು ಹೋದೆಡೆಯಲ್ಲೆಲ್ಲಾ ಜನರನ್ನು ನಕ್ಕು ನಗಿಸಿದ ಕೈಲಾಸಂ ನಿಜಜೀವನದ ರಂಗದಿಂದ ಮರೆಯಾದದ್ದು ೨೩.೧೧.೧೯೪೬ರಲ್ಲಿ. ಹೊರಗಿನ ಕೊಂಡಿಗಳು ಚಿಲುಮೆ - http://chilume.com/?author=43 ಕೈಲಾಸಂ @ ನಂಜನಗೂಡು: ಮರೆತ ಅಧ್ಯಾಯದ ನೆನಪು;ಪದ್ಮಾ ಶ್ರೀರಾಮ;18 Sep, 2016 ಟಿ.ಪಿ.ಕೈಲಾಸಂ ಟಿಪಿಕೈಲಾಸಂ ಉಲ್ಲೇಖಗಳು ಟಿ.ಪಿ.ಕೈಲಾಸಂ ಟಿ.ಪಿ.ಕೈಲಾಸಂ ಟಿ.ಪಿ.ಕೈಲಾಸಂ ೧೮೮೪ ಜನನ ೧೯೪೬ ನಿಧನ ಮೈಸೂರಿನ ಬರಹಗಾರರು
832
https://kn.wikipedia.org/wiki/%E0%B2%A1%E0%B2%BF.%E0%B2%B5%E0%B2%BF.%E0%B2%97%E0%B3%81%E0%B2%82%E0%B2%A1%E0%B2%AA%E0%B3%8D%E0%B2%AA
ಡಿ.ವಿ.ಗುಂಡಪ್ಪ
ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು. ಬಾಲ್ಯ ಜೀವನ ಡಿ.ವಿ.ಜಿ ಅವರು ೧೮೮೭, ಮಾರ್ಚ್ ೧೭ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ವೃತ್ತಿ ಜೀವನ ಪ್ರೌಢಶಾಲೆಯಲ್ಲಿ ಸಾಹಿತ್ಯ ಕೃಷಿ ದಿವಾನ್ ರಂಗಾಚಾರ್ಯ ಅವರ ಬಗ್ಗೆ ಇಂಗ್ಲಿಷಿನಲ್ಲಿ ಬರೆದ ಲೇಖನ ಡಿ.ವಿ.ಜಿ ಅವರ ಬದುಕಲ್ಲಿ ಹೊಸ ತಿರುವು ಪಡೆಯಿತು. ಮುಂದೆ ಪುಸ್ತಕ ರೂಪಕ್ಕೆ ತರಲು ಹಲವು ಮಾರ್ಪಾಡು ಮಾಡಿದರು. ಇದು ಪ್ರಕಟವಾಗುತ್ತಿದ್ದಂತೆ ಕೃತಿ ಪ್ರಕಟಣೆ ಮೂಲಕವೂ ಹಣ ಬರುವಂತಾಯಿತು. ಗುಂಡಪ್ಪನವರ ಸಮಗ್ರ ಸಾಹಿತ್ಯ ಸಾಹಿತ್ಯ ಮಾತ್ರವಲ್ಲದೆ ಚರಿತ್ರೆ, ರಾಜನೀತಿ, ತತ್ವಜ್ಞಾನ, ಪ್ರಜಾಪ್ರಭುತ್ವ, ಸಮಾಜ ವಿಜ್ಞಾನ, ಸಾರ್ವಜನಿಕ ಜೀವನ, ಮುಂತಾದ ಹಲವಾರು ವಿಷಯಗಳನ್ನು ಕುರಿತು ಅವರು 66 ಕನ್ನಡ ಕೃತಿಗಳನ್ನು ರಚಿಸಿರುವುದರ ಜೊತೆಗೆ, ಇಂಗ್ಲಿಷ್ – ಕನ್ನಡ ಭಾಷೆಗಳೆರಡರಲ್ಲಿಯೂ ನೂರಾರು ಉಪಯುಕ್ತ ಲೇಖನಗಳನ್ನೂ ಬರೆದಿರುತ್ತಾರೆ. ಇವರ ಇಂಗ್ಲಿಷ್ ಕೃತಿಗಳು ಹಾಗೂ ಲೇಖನಗಳನ್ನು ವಿಶ್ವವಿಖ್ಯಾತ ವಿದ್ವಾಂಸರಾದ ಡಾ. ಎ.ಬಿ. ಕೀತ್ ಹಾಗೂ ಸಿ.ಎಫ್. ಆಂಡ್ರ್ಯೂಸ್ ಮತ್ತು ನಮ್ಮ ದೇಶದ ಅಗ್ರಗಣ್ಯ ವ್ಯಕ್ತಿಗಳಾಗಿದ್ದ ಎಸ್. ಕವಿತೆಗಳು ನಿವೇದನ (1942) ಉಮರನ ಒಸಗೆ ಮಂಕುತಿಮ್ಮನ ಕಗ್ಗ - I ಮರುಳ ಮುನಿಯನ ಕಗ್ಗ - II ಶ್ರೀರಾಮ ಪರೀಕ್ಷಣಂ ಅ೦ತಃಪುರಗೀತೆ ಗೀತ ಶಾಕುಂತಲಾ ಜ್ಞಾಪಕ ಚಿತ್ರಶಾಲೆ ನಿಬಂಧ ಜೀವನ ಸೌಂದರ್ಯ ಮತ್ತು ಸಾಹಿತ್ಯ ಸಾಹಿತ್ಯ ಶಕ್ತಿ ಸಂಸ್ಕೃತಿ ಬಾಳಿಗೊಂದು ನಂಬಿಕೆ ಜೀವವನಧರ್ಮ ಯೋಗ (ದೈನಂದಿನ ಜೀವನದ ಯೋಗ)-(ಗೀತೆಯ ಮೇಲೆ ಪ್ರವಚನ ಸಂಗ್ರಹ) ನಾಟಕ ವಿದ್ಯಾರಣ್ಯ ವಿಜಯ ಜಾಕ್ ಕೇಡ್ ಮ್ಯಾಕ್ ಇಂಗ್ಲಿಷಿನಲ್ಲಿ Vedanta and Nationalism (1909) The Problems of Indian Native States (1917) The Native States in the Empire (1918) The Indian Native States and the Montagu-Chelmsford Report (1918) The Government of India and the Indian States, The Indian States Committee : A Note on its Terms of Reference and Their Implications (1928) All About Mysore (1931) The States and their People in the Indian Constitution (1931) ಸಾಧನೆ ೧೯೩೫ ರಲ್ಲಿ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಸ್ಥಾಪಿಸಿದರು. ಡಿ.ವಿ.ಜಿ. ಅವರು, ಮೈಸೂರು ವಿಶ್ವವಿದ್ಯಾನಿಲಯ ಪ್ರಕಟಿಸಿದ ‘ಇಂಗ್ಲಿಷ್–ಕನ್ನಡ ನಿಘಂಟು’ ಕೃತಿಯ ಸಂಪಾದಕ ಸಮಿತಿಯಲ್ಲಿದ್ದರು. 1939ರಲ್ಲಿ ಮೈಸೂರು ರಾಜ್ಯಾಂಗ ಸುಧಾರಣಾ ಸಮಿತಿ ಸದಸ್ಯರಾಗಿದ್ದರು. ರಾಜಕೀಯ ದೃಷ್ಟಿಕೋನ ಅವರ ಈ ಮಾತುಗಳು: ‘ರಾಜದಂಡ ಹುಟ್ಟಿದ್ದು ಮನುಷ್ಯನಿಗೆ ಮನುಷ್ಯನ ವಿಷಯದಲ್ಲಿರುವ ಹೆದರಿಕೆಯಿಂದ. ರಾಜ್ಯನಿಬಂಧನೆಯಾದದ್ದೂ ಮನುಷ್ಯನಿಗೆ ಮನುಷ್ಯನಲ್ಲಿರುವ ಅಪನಂಬಿಕೆಯಿಂದ. ಮನುಷ್ಯರು ಅನ್ಯೋನ್ಯ ಸಹವಾಸದಲ್ಲಿರಬೇಕಾಗಿಬಂದ ಮೇಲೆ, ಒಬ್ಬನನ್ನೊಬ್ಬನು ನಂಬದಿದ್ದರೆ ಬದುಕು ಸಾಗದು; ಪೂರ್ತಿ ನಂಬುವುದೆಂದರೆ ವಂಚನೆಯ ಶಂಕೆ. ಹೀಗೆ ನಂಬಿಕೆ–ಅಪನಂಬಿಕೆಗಳ ಬೆರಕೆಯೇ ರಾಜ್ಯಸಂಬಂಧಗಳ ಒಳತಿರುಳು... ಸಾರ್ವಜನಿಕ ಕಾರ್ಯಕ್ಕೆಂದು ಮುಂದೆ ಬರುವವರ ಮನಸ್ಸುಗಳಲ್ಲಿ ಪ್ರತ್ಯಕ್ಷವಾಗಲ್ಲದಿದ್ದರೆ ಪರೋಕ್ಷವಾಗಿಯಾದರೂ, ಸಮೀಪದಲ್ಲಿ ಅಲ್ಲದಿದ್ದರೆ ದೂರವಾಗಿಯಾದರೂ, ಸ್ವಪ್ರಯೋಜನದ ನಿರೀಕ್ಷೆ ಅಷ್ಟೋ ಇಷ್ಟೋ ಇರುವುದು ಅಸ್ವಾಭಾವಿಕವಲ್ಲ. ಆದರೆ ಎಲ್ಲಿ ಅವರು ನೂರಕ್ಕೆ ನೂರು ಮಂದಿಯೂ ಅಂಥವರೇ ಆಗಿದ್ದಾರೆಯೋ ಆ ದೇಶ ತೀರ ಬಡದೇಶವೆನ್ನಬೇಕು. ಸ್ವಾಭಾವಿಕವಾದ ಆಶಾಪ್ರವೃತ್ತಿಯ ಮಟ್ಟದಿಂದ ಮೇಲೇರಿ ನಡೆಯಬಲ್ಲವನು ದೇಶದ ನೂರರಲ್ಲಿ ಹತ್ತು ಮಂದಿಯಾದರೂ ಎಲ್ಲಿ ದೊರೆಯುತ್ತಾರೆಯೋ ಅದೇ ಪ್ರಜಾರಾಜ್ಯವನ್ನು ಅನರ್ಥದಿಂದ ಉಳಿಸಿಕೊಳ್ಳಬಲ್ಲ ದೇಶ’. ರಾಜಕೀಯ ಒಂದು ಉದ್ಯಮವಾಗಿ ಪರಿವರ್ತನೆಯಾಗುವುದರ ಅಪಾಯದ ಬಗ್ಗೆಯೂ ಡಿವಿಜಿ ಎಚ್ಚರಿಸಿದ್ದರು. ‘ಅನ್ನ ವಸ್ತು ಸಂಪಾದನೆಗಾಗಿ ಬೇರೆ ವೃತ್ತಿಯನ್ನಿರಿಸಿಕೊಂಡು, ಕೇವಲ ಸಾರ್ವಜನಿಕ ಹಿತದೃಷ್ಟಿಯಿಂದ ರಾಜಕೀಯಕ್ಕೆ ಕೈ ಹಚ್ಚುವವರೆಲ್ಲ ನಿಷ್ಪಾಕ್ಷಿತ ರಾಜ್ಯಸ್ಥರೇ. ಅಂಥವರ ಸ್ವತಂತ್ರ ಪೋಷಣೆಯಿಂದ ಬೆಳೆಯಬೇಕಾದದ್ದು ನಮ್ಮ ರಾಜಕೀಯ’ ಎಂದು ಆಶಿಸಿದರು. ಗೌರವಗಳು / ಪ್ರಶಸ್ತಿಗಳು ಡಿ.ವಿ.ಗುಂಡಪ್ಪನವರು ೧೯೩೨ ರಲ್ಲಿ ಮಡಿಕೇರಿಯಲ್ಲಿ ನಡೆದ ೧೮ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರಾಗಿದ್ದರು. ೧೯೬೧ ರಲ್ಲಿ ಡಿ.ವಿ.ಜಿ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಿ. ಲಿಟ್. ಪದವಿ ನೀಡಿ ಗೌರವಿಸಿತು. ಇದು ಡಿ.ವಿ.ಜಿ ಅವರು ಪತ್ರಿಕೋದ್ಯಮ ಹಾಗೂ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆಗಾಗಿ ಸಂದ ಪುರಸ್ಕಾರ. ೧೯೬೭ ರಲ್ಲಿ ಶ್ರೀಮದ್ಭಗವದ್ಗೀತಾ ತಾತ್ಪರ್ಯ ಎಂಬ ಗ್ರಂಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತು. ೧೯೭೩ ರಲ್ಲಿ ಡಿ.ವಿ.ಜಿ ಸನ್ಮಾನ ಸಮಿತಿ ಇವರಿಗೆ ಒಂದು ಲಕ್ಷ ರೂಪಾಯಿಗಳ ಗೌರವಧನ ಸಮರ್ಪಿಸಿತು. ಇದನ್ನು ತಾವೇ ಸ್ಥಾಪಿಸಿದ ಗೋಖಲೆ ಸಂಸ್ಥೆಗೆ ದಾನ ಮಾಡಿದರು. ೧೯೭೪ರಲ್ಲಿ ಭಾರತ ಸರ್ಕಾರ "ಪದ್ಮಭೂಷಣ ಪ್ರಶಸ್ತಿ" ನೀಡಿ ಗೌರವಿಸಿತು. ಭಾರತೀಯ ಅಂಚೆ ಸೇವೆ ಡಿವಿಜಿಯವರ ನೆನಪಿಗಾಗಿ ೧೯೮೮ರಲ್ಲಿ ಅಂಚೆಚೀಟಿ ಬಿಡುಗಡೆ ಮಾಡಿತು. ಅವರ ಹಾಸ್ಯಪ್ರಜ್ಞೆ ಜೀವನದಲ್ಲಿ ತೊಂದರೆಗಳಿದ್ದರೂ ಅವರಲ್ಲಿ ಹಾಸ್ಯ ಪ್ರವೃತ್ತಿಯೂ ಇತ್ತು. ಅವರು ವ್ಯಾಕರಣಕಲಿಯಲು ಗರಣಿಕೃಷ್ಣಾಚಾರ್ಯರಲ್ಲಿ ಹೋದಾಗ ಅವರಿಗೆ ಶಬ್ದಶಾಸ್ತ್ರ ಒಲಿಯದೆ ಸೂಪಶಾಸ್ತ್ರದಲ್ಲಿ ಪರಿಣತಿ ಪಡೆದುದಾಗಿ ಒಂದು ಹಾಸ್ಯ ಭರಿತ ಸಂಸ್ಕೃತ ಶ್ಲೋಕದಲ್ಲಿ ಹೇಳುತ್ತಾರೆ: ನ ವೇದಾಂತೇ ಗಾಢಾ ನಚ ಪರಿಚಿತಂ ಶಬ್ದಶಾಸ್ತ್ರಂ| ನ ವಾ ತರ್ಕೇ ವೇದೇ ನ ಚ ಸರಸತಾ ಕಾವ್ಯನಿಹವೇ| ವಯಂ ಶ್ರೀಮದ್ಬ್ಯಾಳೀಹುಳಿ ಪಳದ್ಯ ಕೊಸುಂಂಬ್ರಿತೊವ್ವೀ| ಹಯಗ್ರೀವಾಂಬೋಡೀ ಕರಿಗಡಬು ದಧ್ಯನ್ನ ರಸಿಕಾಃ|| ಅರ್ಥ: ನಾವು ವೇದಂತದಲ್ಲಿ ನುರಿತವರಲ್ಲ, ವ್ಯಾಕರಣವನ್ನೂ ಅರಿತವರಲ್ಲ, ತರ್ಕವೇದಗಳನ್ನೂ ತಿಳಿದವರಲ್ಲ, ಸಾಹಿತ್ಯದಲ್ಲಿ ಸರಸತೆಇಲ್ಲ, ಆದರೆ ಕೇವಲ ಶ್ರೀಮದ್ ಬೇಳೇಹುಳಿ,ಪಳದ್ಯ, ಕೋಸಂಬರಿ, ತೊವ್ವೆ,ಹಯಗ್ರೀವ, ಅಂಬೊಡೆ, ಕರಿಗಡಬು ಮತ್ತು ಮೊಸರನ್ನದಲ್ಲಿ ರಸಿಕರು. ಸ್ಮಾರಕ ೨೦೦೩ರಲ್ಲಿ ಬೆಂಗಳೂರಿನ ಬಸವನಗುಡಿ ಬ್ಯೂಗಲ್ ರಾಕ್ ಪಾರ್ಕಿನಲ್ಲಿ ಡಿವಿಜಿಯವರ ಪ್ರತಿಮೆಯನ್ನು ಸ್ಥಾಪಿಸಲಾಯಿತು. ನಿಧನ ೧೯೭೫ ರ ಅಕ್ಟೋಬರ್ ೭ ರಂದು ಡಿ ವಿ ಜಿ ನಿಧನರಾದರು. ಹೆಚ್ಚಿಗೆ ಓದಲು ಬಿ. ಜಿ. ಎಲ್. ಸ್ವಾಮಿ ಮಂಕುತಿಮ್ಮನ ಕಗ್ಗ ಮರುಳ ಮುನಿಯನ ಕಗ್ಗ ಕನ್ನಡ ನೆಲದಲ್ಲಿ ಗಾಂಧಿ ಡಿ.ವಿ.ಜಿ.ಗಾಂಧೀಜಿಯವರನ್ನು ಮೊಟ್ಟಮೊದಲಿಗೆ ಕರ್ನಾಟಕಕ್ಕೆ ಕರೆತಂದಿದ್ದರು. ಡಿ.ವಿ. ಗುಂಡಪ್ಪನವರ ಚೊಚ್ಚಿಲ ಕೃತಿ ‘ವೇದಾಂತ ಅಂಡ್ ನ್ಯಾಷನಲಿಸಂ ಡಿವಿಜಿ:ಪ್ರಜಾಪ್ರಭುತ್ವದ ಬೆಳಕು;ಎಸ್‌. ಸೂರ್ಯಪ್ರಕಾಶ ಪಂಡಿತ್‌;17 Mar, 2017 ; ಕಣಜ-ಡಿವಿಗುಂಡಪ್ಪ. ‘ಡಿ.ವಿ.ಗುಂಡಪ್ಪ: ಹೃದಯವಂತ ಧೀಮಂತ;Nateshababu H | Vijaya KarnatakaUpdated: 17 Mar 2012;ಅ.ರಾ.ಮಿತ್ರ ಉಲ್ಲೇಖಗಳು ಬಾಹ್ಯ ಸಂಪರ್ಕಗಳು ಡಿ.ವಿ.ಜಿ. ಅವರ ಪತ್ರಗಳು ಮರುಳ ಮುನಿಯನ ಕಗ್ಗ ಕನ್ನಡ ಸಾಹಿತ್ಯ ಡಿ.ವಿ.ಗುಂಡಪ್ಪ ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಕನ್ನಡ ಕವಿಗಳು
842
https://kn.wikipedia.org/wiki/%E0%B2%95%E0%B3%82%E0%B2%A1%E0%B3%8D%E0%B2%B2%E0%B2%BF
ಕೂಡ್ಲಿ
ಕೂಡ್ಲಿ (ಕೂಡಲಿ) ಶಿವಮೊಗ್ಗ ಜಿಲ್ಲೆಯ ಒಂದು ಪುಟ್ಟ ಊರು. ಈ ಊರು ಭಾರತ ದೇಶದ ಕರ್ನಾಟಕ ರಾಜ್ಯಕ್ಕೆ ಸೇರುತ್ತದೆ. ತುಂಗಾ ಮತ್ತು ಭದ್ರಾ - ನದಿಗಳು, ಬೇರೆ ಬೇರೆಯಾಗಿ ಉಗಮಿಸಿ, ಕೂಡ್ಲಿ (ಕೂಡಲಿ) ಎಂಬಲ್ಲಿ ಈ ಜೀವನದಿಗಳ ಸಂಗಮವಾಗುತ್ತವೆ. ಈ ಊರು ತುಂಗಭದ್ರಾ ನದಿಗೆ ಜನ್ಮ ನೀಡುವ ಸ್ಥಳ. ಪ್ರಾಮುಖ್ಯತೆ ಆದಿ ಕಾಲದ ಸಂಗಮೇಶ್ವರ ದೇವಾಲಯ, ಸಂಗಮ ಹಾಗೂ ಪರಿಸರದ ವಿಹಂಗಮ ನೋಟ ಈ ಪ್ರದೇಶವನ್ನು ಸುಂದರಗೊಳಿಸಿದೆ. ಮಗದೊಂದು ಪ್ರವಾಸಿ ತಾಣವೆಂದೂ ಹೇಳಿದರೆ ತಪ್ಪಾಗದು. ಇಲ್ಲಿಯ ರಂಗನಾಥ ಸ್ವಾಮಿ ದೇವಾಲಯವೂ ಜನಪ್ರಿಯ. ಸಂಗಮ ಸ್ಥಳದಲ್ಲಿ ಸಂಗಮೇಶ್ವರನ ಗುಡಿ ಇದೆ. ಈ ಪುಟ್ಟ ಗುಡಿ ಸಂಗಮ ಸ್ಥಳವನ್ನು ಸೂಚಿಸುತ್ತದೆ. ಸಂಗಮೇಶ್ವರ ದೇವಾಲಯಕ್ಕೆ ಮಹತ್ತರ ಇತಿಹಾಸವಿರುವುದು. ಈ ದೇವಾಲಯ ಹೊಯ್ಸಳರ ಕಾಲದ್ದೆಂದು ಹೇಳಲಾಗುತ್ತದೆ. ಪ್ರಾಚೀನ ಶಿಲ್ಪಕಲೆಗಳಿಂದ ರಾರಾಜಿಸುವ ಈ ದೇವಾಲಯ ಕೂಡ್ಲಿಯ ಪ್ರಮುಖ ಆಕರ್ಷಣೆಗಳಲ್ಲೊಂದು. ಇತಿಹಾಸ ಇಲ್ಲಿಯ ಪ್ರಾಚೀನ ಸಂಗಮೇಶ್ವರ ದೇವಾಲಯ ಹೊಯ್ಸಳರ ಕಾಲದ್ದೆಂದು ಹೇಳಲಾಗುತ್ತದೆ. ಇಲ್ಲಿ ಕೆಲವು ಪ್ರಾಚೀನ ಶಾಸನಗಳಿರುವುದುಂಟು. ದೇವಾಲಯದ ಸುಂದರ ಶಿಲ್ಪಕಲೆ ಜನರ ಮನ ಸೂರೆಗೊಳಿಸುತ್ತದೆ. ಇದಲ್ಲದೆ ಇನ್ನೂ ಕೆಲವು ಚಿಕ್ಕ ಪುಟ್ಟ ಪ್ರಾಚೀನ ದೇವಾಲಯಗಳು ಇಲ್ಲಿ ಇರುವುದುಂಟು. ಕೂಡಲಿಯಲ್ಲಿ ಶಾರದ ಪೀಠವಾದ ಕೂಡಲಿ ಶೃಂಗೇರಿ ಮಠ. ಕೂಡ್ಲಿಯಲ್ಲಿ ಆರ್ಯ ಅಕ್ಷೋಭ್ಯ ತೀರ್ಥರ ಮಠವಿದೆ. ಕೂಡ್ಲಿ ಜಾತ್ರೆ ಪ್ರತಿ ವರ್ಷ ಯುಗಾದಿ ಹಬ್ಬದ ಸಂದರ್ಭ ಕೂಡ್ಲಿಯಲ್ಲಿ ಶ್ರೀ ಸಂಗಮೇಶ್ವರ ಜಾತ್ರೆ ನಡೆಯಲಿದೆ. ಸುಮಾರು 200 ಗ್ರಾಮದ ಜನರು ಜಾತ್ರೆಯಲ್ಲಿ ಪಾಲ್ಗುಳ್ಳುತ್ತಾರೆ. ನೂರಕ್ಕು ಹೆಚ್ಚು ದೇವರುಗಳು ಕೂಡ ಜಾತ್ರೆಗೆ ಬರುತ್ತವೆ. ತುಂಗಾ, ಭದ್ರಾ ಸಂಗಮ ಸ್ಥಳದಲ್ಲಿ ದೇವರುಗಳನ್ನು ಶುಚಿಗೊಳಿಸಿ, ಪೂಜೆ ಸಲ್ಲಿಸಲಾಗುತ್ತದೆ. ಸಹಸ್ರಾರು ಭಕ್ತರು ಇಲ್ಲಿ ಬಂದು ಪುಣ್ಯ ಸ್ನಾನ ಮಾಡಿ, ಶ್ರೀ ಸಂಗಮೇಶ್ವರ ಸ್ವಾಮಿ ಪೂಜೆ ಸಲ್ಲಿಸುತ್ತಾರೆ. ಹೊಳೆಯ ನಡುಗಡ್ಡೆಯ ಮೇಲೆ ಜಾತ್ರೆಯ ಅಂಗಡಿಗಳನ್ನು ತೆಗೆಯಲಾಗುತ್ತದೆ. ತೆಪ್ಪದ ಮೂಲಕ ನಡುಗಡ್ಡೆಗೆ ಹೋಗಬೇಕಾಗುತ್ತದೆ. ಭೂಗೋಳ ಐತಿಹಾಸಿಕ ಸ್ಥಳಗಳು ಪ್ರವಾಸೋದ್ಯಮ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳು
850
https://kn.wikipedia.org/wiki/%E0%B2%AC%E0%B3%86%E0%B2%82%E0%B2%97%E0%B2%B3%E0%B3%82%E0%B2%B0%E0%B3%81
ಬೆಂಗಳೂರು
ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ, ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರ ಬೆಂಗಳೂರು ನಗರ. ಬೆಂಗಳೂರು ತಾಲೂಕು 392 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. 1956ರಲ್ಲಿ ಬೆಂಗಳೂರು 3 ತಾಲ್ಲೂಕುಗಳನ್ನು ಹೊಂದಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಆನೇಕಲ್. 2020ರಲ್ಲಿ ಬೆಂಗಳೂರು 5 ತಾಲ್ಲೂಕು ಹೊಂದಿದ್ದು, ಬೆಂಗಳೂರು ತಾಲೂಕುನ್ನು ವಿಭಜಸಿ ಯಲಹಂಕ ತಾಲೂಕು ರಚನೆ, ಬೆಂಗಳೂರು ದಕ್ಷಿಣ ತಾಲೂಕನ್ನು ಕೆಂಗೇರಿ ಎಂದು ಮರು ನಾಮಕರಣ ಮಾಡಲಾಗಿದೆ, ಕೆಂಗೇರಿ ತಾಲ್ಲೂಕು ವಿಭಜಸಿ ಕೃಷ್ಣರಾಜಪುರ ತಾಲೂಕು ರಚನೆ ಮಾಡಲಾಗಿದೆ, ಮತ್ತು ಆನೇಕಲ್ ತಾಲೂಕು ಹೊಂದಿದೆ. ಆಡಳಿತದ ಅನುಕೂಲಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿ.ಬಿ.ಎಂ.ಪಿ)ಯನ್ನು ತಾಲೂಕುವಾರು ರಚನೆ ಮಾಡಲಾಗಿದೆ. ಬೆಂಗಳೂರು ಮಹಾನಗರ ಪಾಲಿಕೆ ರಚನೆ ಮಾಡಲಾಗುವುದು. 01.ಬೆಂಗಳೂರು ಮಹಾನಗರ ಪಾಲಿಕೆ 02.ಕೆಂಗೇರಿ ಮಹಾನಗರ ಪಾಲಿಕೆ 03.ಕೃಷ್ಣರಾಜ ಪುರ ಮಹಾನಗರ ಪಾಲಿಕೆ 04.ಯಲಹಂಕ ಮಹಾನಗರ ಪಾಲಿಕೆ ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ 'ಸಿಲಿಕಾನ್ ವ್ಯಾಲಿ' ಎಂದೇ ಪ್ರಸಿದ್ಧ. ಸಮುದ್ರ ಮಟ್ಟದಿಂದ ಸುಮಾರು ೩೦೦೦ ಅಡಿ (೯೧೪.೪ ಮೀ) ಗಳಿಗಿಂತ ಎತ್ತರದಲ್ಲಿರುವ ಬೆಂಗಳೂರು ನಗರವು ವರ್ಷವಿಡೀ ಆಹ್ಲಾದಕರ ವಾತಾವರಣ ಹೊಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕೆರೆಗಳನ್ನು ಹೊಂದಿದೆ. 'ಕಬ್ಬನ್ ಪಾರ್ಕ್', 'ಲಾಲ್ ಬಾಗ್'ಗಳಂತಹ ದೊಡ್ಡ ಉದ್ಯಾನವನಗಳನ್ನು ಹೊಂದಿರುವ ಈ ನಗರವು 'ಉದ್ಯಾನ ನಗರಿ' ಎಂದೂ ಪ್ರಸಿದ್ಧ. ವಿಶ್ವದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯಮಿಗಳ ಅಚ್ಚುಮೆಚ್ಚಿನ ೧೦ ನಗರಗಳಲ್ಲಿ ಬೆಂಗಳೂರು ಕೂಡ ಒಂದು. ಬೆಂಗಳೂರು ಜಿಲ್ಲೆಯ ತಾಲ್ಲೂಕುಗಳು ಮತ್ತು ವಿಸ್ತೀರ್ಣ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯು ವಿಸ್ತೀರ್ಣದಲ್ಲಿ ಚಿಕ್ಕದಾಗಿರುವ ಕಾರಣ ಒಂದು ಜಿಲ್ಲೆಯಾಗಿ ಮಾಡಲಾಗಿದೆ ಮತ್ತು ಹೆಚ್ಚು ಜನಸಂಖ್ಯೆ ಹೊಂದಿರುವ ಕಾರಣ ಏರಡು ಜಿಲ್ಲಾ ಕೇಂದ್ರಗಳನ್ನೂ ಒಳಗೊಂಡಿದೆ. ಬೆಂಗಳೂರು ಜಿಲ್ಲೆಯ ಹೋಬಳಿಗಳು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯು ವಿಸ್ತೀರ್ಣದಲ್ಲಿ ಚಿಕ್ಕದಾಗಿರುವ ಕಾರಣ ಒಂದು ಜಿಲ್ಲೆಯಾಗಿ ಮಾಡಲಾಗಿದೆ ಮತ್ತು ಹೆಚ್ಚು ಜನಸಂಖ್ಯೆ ಹೊಂದಿರುವ ಕಾರಣ ಏರಡು ಜಿಲ್ಲಾ ಕೇಂದ್ರಗಳನ್ನೂ ಒಳಗೊಂಡಿದೆ. ಭೂಗೋಳ ಬೆಂಗಳೂರು ಸಮುದ್ರ ಮಟ್ಟ ದಿಂದ ೯೦೦ ಮೀ ಎತ್ತರದಲ್ಲಿದೆ. ಭೌಗೋಳಿಕವಾಗಿ ೧೨° ೩೯' ಉ ಹಾಗೂ ೧೩° ಉ ಅಕ್ಷಾಂಶದಲ್ಲಿದ್ದರೂ ಕೂಡ ಬೆಂಗಳೂರಿನಲ್ಲಿ ಸದಾಕಾಲ ತಂಪು ವಾತಾವರಣವಿರುವುದು, ಸುಮಾರು ೨೪°C ರಿಂದ ೩೫°C ರವರೆಗೆ ಉಷ್ಣಾಂಶವಿರುವುದು. ಸದಾಶಿವನಗರದ ರಮಣಶ್ರೀ ಪಾರ್ಕ್ ಬೆಂಗಳೂರಿನ ಅತೀ ಎತ್ತರದ ಪ್ರದೇಶವಾಗಿದೆ. ಈ ಮೊದಲು ಮಲ್ಲೇಶ್ವರದ ವಯ್ಯಾಲಿ ಕಾವಲ್ ಎತ್ತರದ ಪ್ರದೇಶವಾಗಿತ್ತು. ಬೆಂಗಳೂರಿನ ಹೊಸಕೆರೆಹಳ್ಳಿ ಅತಿ ತಗ್ಗಿನ ಪ್ರದೇಶವಾಗಿದೆ. ಡೆಕ್ಕನ್ ಪ್ರಸ್ತಭೂಮಿಯ ಒಂದು ಭಾಗವಾದ ಮೈಸೂರು ಪ್ರಸ್ತಭೂಮಿಯ ಹೃದಯ ಭಾಗದಲ್ಲಿ ನೆಲೆಸಿರುವ ಈ ನಗರವು, ಕರ್ನಾಟಕದ ಆಗ್ನೇಯ ಭಾಗದಲ್ಲಿದೆ. ೭೪೧ ಚ.ಕಿ.ಮೀ. ವಿಸ್ತೀರ್ಣವುಳ್ಳ ಈ ಪ್ರದೇಶವು ೫.೮ ಮಿಲಿಯನ್ (ಅತಿ ಹೆಚ್ಚು ಜನಸಂಖ್ಯೆಯುಳ್ಳ ಮೂರನೆ ನಗರ) ಜನಸಂಖ್ಯೆಯನ್ನು ಹೊಂದಿದೆ. ಮುಖ್ಯವಾಗಿ ಇದು ಸಮುದ್ರ ಮಟ್ಟದಿಂದ ೩೧೧೩ ಅಡಿ(೯೪೯ ಮಿ.) ಎತ್ತರದಲ್ಲಿ ಸ್ಥಿತವಾಗಿರುವುದರಿಂದ, ಸುಂದರವಾದ ವಾತಾವರಣವನ್ನು ಹೊಂದಿದೆ. ಉಷ್ಣವಲಯದ ವಾತಾವರಣವಿರುವುದರಿಂದ, ಈ ಪಟ್ಟಣವು ಪದೇ ಪದೇ ಮಳೆಯನ್ನು ಅನುಭವಿಸುತ್ತ ಬೇಸಿಗೆಗಾಲದಲ್ಲಿ ಬೆಚ್ಚಗಿದ್ದು ಚಳಿಗಾಲದಲ್ಲಿ ತಂಪಾಗಿರುತ್ತದೆ. ಇಂತಹ ಸುಂದರ ವಾತಾವರಣವು ಒಂದೊಮ್ಮೆ ನಿವೃತ್ತಿ ಹೊಂದಿದವರನ್ನು ಆಕರ್ಷಿಸಿದ್ದು, ನಿವೃತ್ತಿ ಹೊಂದಿದವರ ಸ್ವರ್ಗ ಎಂದೂ ಕೂಡ ಇದಕ್ಕೆ ಕರೆಯಲಾಗುತ್ತಿತ್ತು. ಬೇಸಿಗೆಯಲ್ಲಿ ತಾಪಮಾನವು ೨೦ ರಿಂದ ೩೬ ಡಿಗ್ರಿಯಿದ್ದು, ಚಳಿಗಾಲದಲ್ಲಿ ೧೭ ರಿಂದ ೨೭ ಡಿಗ್ರಿಯಾಗಿರುತ್ತದೆ. ಇತಿಹಾಸ ಕ್ರಿಸ್ತ ಶಕ ೧೫೩೭ರ ತನಕ ಬೆಂಗಳೂರು ದಕ್ಷಿಣ ಭಾರತದ ಸಂಸ್ಥಾನಗಳಾದ ಗಂಗ, ಚೋಳ ಮತ್ತು ಹೊಯ್ಸಳರ ಆಳ್ವಿಕೆಗೆ ಒಳಪಟ್ಟಿದೆ. ನಂತರ ವಿಜಯನಗರ ಸಾಮ್ರಾಜ್ಯದ ನಾಡ ಪ್ರಭು ಕೆಂಪೇಗೌಡರು ಬೆಂಗಳೂರಿನಲ್ಲಿ ಮಣ್ಣಿನ ಕೋಟೆ ಕಟ್ಟಿ ಆಧುನಿಕ ಬೆಂಗಳೂರಿನ ಉದಯಕ್ಕೆ ಕಾರಣಕರ್ತರಾದರು. ಮರಾಠರು ಮತ್ತು ಮುಘಲರ ಅಲ್ಪಾವಧಿ ಆಡಳಿತಕ್ಕೆ ಒಳಪಟ್ಟಿದ್ದ ಬೆಂಗಳೂರು, ಮೈಸೂರು ರಾಜರ ಆಧಿಪತ್ಯದಲ್ಲೇ ಉಳಿದಿತ್ತು. ನಂತರ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಆಡಳಿತಕ್ಕೆ ಒಳಪಟ್ಟ ಬೆಂಗಳೂರು, ನಾಲ್ಕನೇ ಆಂಗ್ಲೋ ಮೈಸೂರು ಯುದ್ಧ (೧೭೯೯) ದಲ್ಲಿ ಬ್ರಿಟೀಷರ ಪಾಲಾಯಿತು. ತದನಂತರ ಬ್ರಿಟೀಷರು ಮೈಸೂರು ಸಂಸ್ಥಾನವನ್ನು ತಮ್ಮ ಆಡಳಿತದ ಒಂದು ರಾಜ್ಯವನ್ನಾಗಿಸಿ, ಬೆಂಗಳೂರನ್ನು ಅದರ ರಾಜಧಾನಿಯಾಗಿ ಘೋಷಿಸಿ, ಮೈಸೂರು ಒಡೆಯರ ಆಡಳಿತಕ್ಕೊಪ್ಪಿಸಿದರು. ಬೆಂಗಳೂರು ೧೫೩೭|೧೫೩೭ರಲ್ಲಿ ಕೆಂಪೇಗೌಡರ (೧೫೧೦ - ೧೫೭೦) ರಾಜಧಾನಿಯಾಗಿತ್ತು.ಈ ನಗರವನ್ನು ಕೆಂಪೇಗೌಡರು ನಿರ್ಮಿಸಿದರು. ಕೆಂಪೇಗೌಡ (೧೫೧೦-೧೫೭೦) ಈ ನಗರವನ್ನು "ಗಂಡು ಭೂಮಿ" ಮತ್ತು "ನಾಯಕರ ರಾಜ್ಯ" ಎಂದು ಹೇಳುತಿದ್ದರು. ಹದಿನೆಂಟನೇ/ಹತ್ತೊಂಬತ್ತನೇ ಶತಮಾನದಲ್ಲಿ ಬೆಂಗಳೂರು ಒಂದು ನಗರವಾಗಿ ಬೆಳೆಯಿತು. ಆಗ ಪ್ರಮುಖವಾಗಿ ನಗರದಲ್ಲಿ ಎರಡು ಮುಖ್ಯ ರಸ್ತೆಗಳಿದ್ದವು. ಅವು "ಚಿಕ್ಕಪೇಟೆ" ಮತ್ತು "ದೊಡ್ಡಪೇಟೆ" ರಸ್ತೆಗಳು. ಸ್ವಾತಂತ್ರ್ಯಾನಂತರ ಬೆಂಗಳೂರು ಬಹು ದೊಡ್ಡ ಕೈಗಾರಿಕಾ ಉತ್ಪಾದನಾ ಕ್ಷೇತ್ರಗಳಿಗೆ ಮನೆಯಾಯಿತು. ಶಾಂತಿ ಸಮೃದ್ಧಿಯೂ, ಪರಿಸರ ಸಮೃದ್ಧಿಯೂ ಜನರನ್ನು ಈ ಊರಿನೆಡೆಗೆ ಆಕರ್ಷಿಸಿತು. ಹೆಚ್ ಎ ಎಲ್, ಬಿ ಇ ಎಲ್, ಐ ಟಿ ಐ, ಇಸ್ರೋ ನಂತಹ ಬಹು ದೊಡ್ಡ ಉತ್ಪಾದನಾ ಘಟಕಗಳಿಗೆ ಮನೆಯಾಯಿತು. ಕೆಂಪೇಗೌಡರ ಮಗನಾದ ಕೆಂಪೇಗೌಡ-೨ ಅನೇಕ ದೇವಸ್ಥಾನ ಮತ್ತು ಗೋಪುರಗಳನ್ನು ನಿರ್ಮಿಸಿದನು. ಅವುಗಳಲ್ಲಿ ಪ್ರಮುಖವಾದ ನಾಲ್ಕು ಗೋಪುರಗಳನ್ನು ಈಗಿನ ಈ ಸ್ಥಳಗಳಲ್ಲಿ ಕಾಣಬಹುದಾಗಿದೆ. ಲಾಲಭಾಗ್ ಕೆಂಪಾಂಬುಧಿ ಕೆರೆ ಹಲಸೂರು ಕೆರೆ ಮೇಖ್ರಿ ವೃತ್ತ ಸಂಸ್ಕೃತಿ ಮತ್ತು ವಿದ್ಯಾಭ್ಯಾಸ ಕಲೆ ಮತ್ತು ಸಂಸ್ಕೃತಿಯ ಬೀಡಾಗಿರುವ ಬೆಂಗಳೂರು ವಿದ್ಯಾಭ್ಯಾಸಕ್ಕೆ ಬಹಳ ಹೆಸರುವಾಸಿ. ಇಲ್ಲಿಯ ಸಂಸ್ಕೃತಿಯೂ ಹಲವು ಪರದೇಶೀಯರನ್ನು ಶತಮಾನಗಳಿಂದ ಆಕರ್ಷಿಸಿದೆ. ಬೆಂಗಳೂರು ನಗರವು ಬಹುಮುಖ ಸಂಸ್ಕೃತಿಯನ್ನು ಹೊಂದಿದ್ದರೂ ಕೂಡ, ಬಹುಪಾಲು ಜನರು ಹಿಂದುಗಳಾಗಿದ್ದಾರೆ. ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಇದೆ . ಕನ್ನಡವು ಇಲ್ಲಿಯ ಅಧಿಕೃತ ಭಾಷೆ‌. ಇಲ್ಲಿ ಬಳಕೆಯಲ್ಲಿರುವ ಇತರ ಭಾಷೆಗಳೆಂದರೆ ಉರ್ದು, ತೆಲುಗು ಮತ್ತು ಮಲಯಾಳಮ್. ಮುಂಬಯಿ ನಂತರ ಹಚ್ಚಿನ ಸಾಕ್ಷರತಾ ಪ್ರಮಾಣ (೮೩%) ಹೊಂದಿದ ಪ್ರದೇಶ ಇದಾಗಿದೆ. ನಗರದ ಶ್ರೀಮಂತ ಸಂಸ್ಕೃತಿಯು, ರಂಗ ಶಂಕರ, ಚೌಡಯ್ಯ ಮೆಮೋರಿಯಲ್ ಹಾಲ್ ಮತ್ತು ರವೀಂದ್ರ ಕಲಾಕ್ಷೇತ್ರಗಳಂತಹ ಸಂಸ್ಥೆಗಳನ್ನು ಪ್ರೋತ್ಸಾಹಿಸುತ್ತ ಸಾಂಸ್ಕೃತಿಕ ಮತ್ತು ಆಧುನಿಕ ರಂಗಭೂಮಿಯಾಗಿ ಬೆಳೆಯಲು ಭದ್ರ ಬುನಾದಿಯಾಗಿದೆ. "ಬೆಂಗಳೂರು ಹಬ್ಬ"ವು ವರ್ಷಕ್ಕೊಮ್ಮೆ ನಡೆಯುವ ಉತ್ಸವವಾಗಿದ್ದು, ಜನರು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಇದೊಂದು ಉತ್ತಮವಾದ ಅವಕಾಶ ಒದಗಿಸುತ್ತದೆ. ದೀಪಾವಳಿ ಮತ್ತು ಗಣೇಶ ಚತುರ್ಥಿಯು ಇನ್ನೆರಡು ಪ್ರಮುಖ ಹಬ್ಬಗಳಾಗಿದ್ದು ಜೊತೆಗೆ ರಂಝಾನ್, ಬಕ್ರೀದ್, ಕ್ರಿಸ್ಮಸ್ ಹಬ್ಬ ಗಳ್ಳನ್ನು ಆಚರಿಸುತ್ತಾರೆ ಶ್ರೀಮಂತ ಧಾರ್ಮಿಕ ಸಂಪ್ರದಾಯಕ್ಕೆ ಸಾಕ್ಷಿಯಾಗಿವೆ. ಬೆಂಗಳೂರಿನ ವೆಂಕಟ್ಟಪ್ಪ ಚಿತ್ರ ಕಲಾ ಪರಿಷತ್ತು, ಭಾರತೀಯ ವಿದ್ಯಾ ಭವನ , ಭಾರತೀಯ ವಿಜ್ಞಾನ ಮಂದಿರ, ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ ಮತ್ತಿತರ ವಿವಿಧ ರೀತಿಯ ಶಿಕ್ಷಣದಲ್ಲಿ ಮಂಚೂಣಿಯಲ್ಲಿವೆ. ಬೆಂಗಳೂರಿನಲ್ಲಿ ಹಲವು ದೇಶೀಯ ಮತ್ತು ಪಾಶ್ಚ್ಯಾತ್ಯ ಸಂಸ್ಕೃತಿಗಳು ಮಿಲನಗೊಂಡಿವೆ. ಆದುದರಿಂದ ಇದು ಈಗ ಕಾಸ್ಮೊಪಾಲಿಟನ್ ಸಿಟಿ ಎಂತಲೂ ಕರೆಯಲ್ಪಡುತ್ತಿದೆ. ಇಲ್ಲಿನ ದೂರದರ್ಶನ ಹಾಗೂ ಆಕಾಶವಾಣಿ ಕೇಂದ್ರಗಳು ಹೆಸರುವಾಸಿ. ದೇಶದ ಮೊದಲ ಖಾಸಗಿ ಎಫ್. ಎಮ್. ರೇಡಿಯೋ, ರೇಡಿಯೋ ಸಿಟಿ ಪ್ರಾರಂಭವಾಗಿದ್ದು ಇಲ್ಲೇ. ಹಾಗೂ ಕರ್ನಾಟಕದ ಮೊಟ್ಟಮೊದಲ ಸಮುದಾಯ ರೇಡಿಯೋಗೆ ಪರವಾನಗಿ ಸಿಕ್ಕಿ ತರಂಗಗಳಲ್ಲಿ ಪ್ರಸಾರವಾದದ್ದು ಇಲ್ಲಿಯೇ. ರೇಡಿಯೋ ಹೆಸರು ರೇಡಿಯೋ ಆಕ್ಟೀವ್ ತರಂಗಾಂತರ ೧೦೭.೮ ಪ್ರತಿಷ್ಠೆಯ ವಿದ್ಯಾ ಸಂಸ್ಥೆಗಳಾದ ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ(ಐ.ಐ.ಎಮ್) ಗಳನ್ನು ಇಲ್ಲಿ ಕಾಣಬಹುದು. ಇಷ್ಟೇ ಅಲ್ಲದೆ, ಬಹು ಸಂಖ್ಯೆಯಲ್ಲಿ ಇಂಜಿನೀಯರಿಂಗ್, ಮೆಡಿಕಲ್ ಮತ್ತು ಮ್ಯಾನೇಜಮೆಂಟ್ ಕಾಲೇಜುಗಳು ಕೂಡ ಇಲ್ಲಿವೆ. ಕೈಗಾರಿಕೆ ಹಿಂದುಸ್ತಾನ ಏರೊನಾಟಿಕ್ಸ್ ಲಿಮಿಟೆಡ್ (ಎಚ್.ಎ.ಎಲ್), ಭಾರತ ಎಲೆಕ್ಟ್ರೊನಿಕ್ಸ್ ಲಿಮಿಟೆಡ್ (ಬಿ.ಇ.ಎಲ್), ಭಾರತ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿ.ಇ.ಎಮ್.ಎಲ್), ಹಿಂದುಸ್ತಾನ ಮಷೀನ್ ಟೂಲ್ಸ್ (ಎಚ್.ಎಮ್.ಟಿ) ಮತ್ತು ಇಂಡಿಯನ್ ಸ್ಪೆಸ್ ರಿಸರ್ಚ್ ಒರ್ಗನೈಸೆಷನ್ (ಇಸ್ರೊ) ಇವುಗಳು ತಮ್ಮ ಪ್ರಧಾನ ಕಛೇರಿಗಳನ್ನು ಇಲ್ಲಿ ತೆರೆದಿದುದರಿಂದ, ನಗರವು ಒಂದು ಉತ್ಪಾದನಾ ಕೇಂದ್ರವಾಗಿ ಬೆಳೆಯಿತು. ಕಂಪನಿಗಳಾದ ಇನ್ಫೊಸಿಸ್, ವಿಪ್ರೊ ಮತ್ತು ಟಿಸಿಎಸ್ ಗಳು ಇಲ್ಲಿ ತಮ್ಮ ಪ್ರಧಾನ ಕಛೇರಿಗಳನ್ನು ತೆರೆದಿದುದರಿಂದ, ನಗರದ ಆರ್ಥಿಕ ಪ್ರಗತಿಯು ಮಹತ್ತರವಾಗಿ ಬೆಳೆಯಿತು. ಬೆಂಗಳೂರಿನಲ್ಲಿರುವ ಇತರ ಪ್ರಮುಖ ಕಂಪನಿಗಳೆಂದರೆ ಇಂಟೆಲ್, ಟೆಕ್ಸಸ್ ಇನ್ಸ್ತ್ರುಮೆನ್ತ್ಸ್, ಕ್ವಾಲ್ಕಾಮ್, ಆರ್ಮ್, ಬ್ರಾಡ್ಕಾಮ್, ಇ.ಎಮ್.ಸಿ. ಸ್ಕುವೆರ್, ನೆಟ್ ಆಪ್, ಸ್ಯಾನ್ ಡಿಸ್ಕ್, ಎಲ್.ಜಿ, ಸ್ಯಾಮ್ಸಂಗ್ ಮತ್ತು ಐ.ಬಿ.ಎಮ್. ಇಲ್ಲಿ ಸೃಷ್ಟಿಯಾದಂತಹ ಉದ್ಯೋಗ ಮಾರುಕಟ್ಟೆಯು ಜಗತ್ತಿನಾದ್ಯಂತ ಎಲ್ಲರನ್ನೂ ಆಕರ್ಷಿಸುತ್ತದೆ, ಇದೊಂದು ಬಹುಸಂಸ್ಕೃತಿ ಹಾಗೂ ಬಹುಜನಾಂಗೀಯ ಸಮಾಜವನ್ನಾಗಿ ಪರಿವರ್ತಿಸಲು ಸಹಾಯವಾಯಿತು. ಬೆಂಗಳೂರು ಯಾವುದೇ ಭಾರತೀಯ ನಗರಕ್ಕಿಂತ ಭಿನ್ನವಾಗಿದೆ, ಇದು ತನ್ನ ಪರಿಪೂರ್ಣ ವರ್ಷಪೂರ್ತಿ ಹವಾಮಾನ, ರಾತ್ರಿಜೀವನ ಮತ್ತು ಆಧುನಿಕ ಜೀವನಶೈಲಿಗೆ ಹೆಸರುವಾಸಿಯಾಗಿದೆ. ಬೆಂಗಳೂರು ಅನಿಯಮಿತ ವ್ಯಾಪಾರ ಅವಕಾಶಗಳು, ಅಭಿವೃದ್ಧಿ ಹೊಂದುತ್ತಿರುವ ಸ್ಟಾರ್ಟ್-ಅಪ್‌ಗಳು ಮತ್ತು ಉತ್ತಮ ಹವಾಮಾನವನ್ನು ಸಹ ಹೊಂದಿದೆ. ಅನೇಕ ಜನರು ಬೆಂಗಳೂರಿಗೆ ಸ್ಥಳಾಂತರಗೊಳ್ಳುವ ಮೂಲ ಕಾರಣ ಮಿತಿಯಿಲ್ಲದ ಉದ್ಯೋಗ ಅವಕಾಶಗಳು ಮತ್ತು ವ್ಯಾಪಾರ ಅವಕಾಶಗಳು. ಈ ನಗರವು ಕೆಲವು ಉನ್ನತ ಐಟಿ ಬ್ರ್ಯಾಂಡ್‌ಗಳ ಪ್ರಧಾನ ಕಛೇರಿಯಾಗಿದೆ. ಇದು ಜಾಗತಿಕವಾಗಿ ವಿಪ್ರೋ, ಗೂಗಲ್, ಇನ್ಫೋಸಿಸ್ ಮುಂತಾದ ಕೆಲವು ಅತ್ಯುತ್ತಮ ಐಟಿ ಕಂಪನಿಗಳಿಗೆ ಕೇಂದ್ರವಾಗಿದೆ. ಮಾಧ್ಯಮ ಬೆಂಗಳೂರಿನಲ್ಲಿ ಮೊದಲ ಮುದ್ರಣಾಲಯವನ್ನು ೧೮೪೦ರಲ್ಲಿ ಸ್ಥಾಪಿಸಲಾಯಿತು. ೧೮೫೯ ರಲ್ಲಿ "ಪಂಜಾಬ್ ಕೇಸರಿ" ಎಂಬ ಮೊದಲ ಇಂಗ್ಲಿಷ್ ವಾರ ಪತ್ರಿಕೆ ಪ್ರಕಟವಾಗಿತ್ತು ಮತ್ತು ೧೮೬೦ ರಲ್ಲಿ "ಮೈಸೂರು ವ್ರಿತ್ತಂತ ಬೋಧಿನಿ" ಎಂಬ ಕನ್ನಡ ಪತ್ರಿಕೆ ಪ್ರಕಟವಾಗಿತ್ತು. ಈಗ "ವಿಜಯ ಕರ್ನಾಟಕ" ಮತ್ತು "ದಿ ಟೈಂಸ್ ಆಫ್ ಇಂಡಿಯಾ" ತುಂಬಾ ಜನಪ್ರಿಯವಾಗಿದೆ ಹಾಗೂ "ಪ್ರಜಾವಾಣಿ" ಮತ್ತು "ಡೆಕ್ಕನ್ ಹೆರಾಲ್ಡ್" ಅತಿ ದೊಡ್ಡ ಮುದ್ರಣಾಲಯಗಳನ್ನು ಹೊಂದಿದೆ. ಬೆಂಗಳೂರು ಟಿವಿ ಮಾಧ್ಯಮ ಮೊದಲ ಬಾರಿಗೆ ನವೆಂಬರ್ ೧ ೧೯೮೧ ರಂದು "ದೂರದರ್ಶನ" ಮುಖಾಂತರ ಪ್ರಾರಂಭವಾಯಿತು. ೧೯ ನವೆಂಬರ್ ೧೯೮೩ ರಂದು ದೂರದರ್ಶನ ನಿರ್ಮಾಣ ಕೇಂದ್ರವನ್ನು ಸ್ಥಾಪಿಸಿ ವಾರ್ತಾ ಪ್ರಸಾರವನ್ನು ಪ್ರಾರಂಭಿಸಿತು. ನಂತರ ೧೯೯೧ ರಂದು ಕನ್ನಡ ದೂರದರ್ಶನ "ಡಿಡಿ ಚಂದನ" ಪ್ರಾರಂಭವಾಯಿತು. ಈಗ ಅನೇಕ ಟಿವಿ ಮಾಧ್ಯಮಗಳು ಜನಪ್ರಿಯವಾಗಿದೆ. ಇದಕ್ಕೆ ಉದಾಹರಣೆ ಟಿವಿ ೯, ಉದಯ, ಈ ಟಿವಿ, ಸುವರ್ಣ, ಜನಶ್ರೀ, ಸಮಯ, ಮುಂತಾದವು. ಸಂಪರ್ಕ ನಗರದ ಒಳ ಹಾಗು ಹೊರಭಾಗಗಳು ಒಂದಕ್ಕೊಂದು ಒಳ್ಳೆಯ ಸಂಪರ್ಕ ಹೊಂದಿರುವ ಕಾರಣ ನಗರದ ಒಳಗೆ ಮತ್ತು ಹೊರಗೆ ಓಡಾಡುವುದು ತುಂಬಾ ಸರಳವಾಗಿದೆ. ನಗರದ ಒಳಗಡೆ ಸಂಚರಿಸಲು, ಜನರು ಆಟೊ ರಿಕ್ಷಾಗಳು, ಕ್ಯಾಬಗಳು, ಮೆಟ್ರೊ ಟ್ರೇನಗಳ ಸೌಲಭ್ಯವನ್ನು ಪಡೆಯಬಹುದು. ವಿಮಾನ ನಿಲ್ದಾಣಕ್ಕೆ ಹೋಗಲು ವಾಯು ವಜ್ರ ಬಸ್ಸುಗಳ ಸೌಲಭ್ಯವಿದೆ. ಬೆಂಗಳೂರು ಆಕಾಶ ಮಾರ್ಗ, ರಸ್ತೆ ಮತ್ತು ರೈಲು ಮಾರ್ಗಗಳ ಮೂಲಕ ಭಾರತದ ಇತರ ಭಾಗಗಳಿಗೂ ಸಂಪರ್ಕ ಹೊಂದಿದೆ. 'ನಮ್ಮ ಮೆಟ್ರೋ'ವಿನ ಮೊದಲನೆಯ ಹಂತ ಪೂರ್ಣವಾಗಿ ಚಾಲನೆಯಲ್ಲಿದೆ. ೪೨ ಕಿಲೋಮೀಟರ್ ಗಳ ಎರಡು ಮಾರ್ಗಗಳು (ಉತ್ತರ ದಕ್ಷಿಣ ದಿಕ್ಕಿನಲ್ಲಿ ಹಸಿರು ಮಾರ್ಗ - ನಾಗಸಂದ್ರದಿಂದ ಯೆಲಚೇನಹಳ್ಳಿವರೆಗೆ, ಪೂರ್ವ ಪಶ್ಚಿಮ ದಿಕ್ಕಿನಲ್ಲಿ ನೇರಳೆ ಮಾರ್ಗ - ಬೈಯ್ಯಪ್ಪನಹಳ್ಳಿಯಿಂದ ನಾಯಂಡಹಳ್ಳಿವರೆಗೆ) ಚಾಲನೆಯಲ್ಲಿದೆ. ಎರಡನೆ ಹಂತದ ಕಾಮಗಾರಿ ನಡೆಯುತ್ತಿದೆ ಭಾರತದ ನೈಋತ್ಯ ರೇಲ್ವೆ ವಲಯಕ್ಕೆ ಇದು ಮುಖ್ಯ ಕೇಂದ್ರವಾಗಿದ್ದು, ಯಶವಂತಪುರ, ಕ್ಯಾಂಟೊನಮೆಂಟ್ ಮತ್ತು ಕೆ.ಆರ್.ಪುರಂ ನಂತಹ ಕೆಲವು ಇತರ ನಿಲ್ದಾಣಗಳನ್ನೂ ಹೊಂದಿದೆ. ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ, ದೇವನಹಳ್ಳಿ ಎಂಬಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದ್ದು, ಇದು ನಗರದಿಂದ ೪೦ ಕಿ.ಮೀ. ದೂರದಲ್ಲಿದೆ. ಪ್ರವಾಸಿ ಸ್ಥಳಗಳು ಬೆಂಗಳೂರು ಇತರ ಸ್ಥಳಗಳಿಗೆ ಉತ್ತಮವಾದ ಸಂಪರ್ಕ ಹೊಂದಿರುವದರಿಂದ ಪ್ರವಾಸಿಗರಿಗೆ ಸ್ವರ್ಗವಾಗಿದ್ದು, ಅನೇಕ ಆಕರ್ಷಣೀಯ ಸ್ಥಳಗಳಾದ ಜವಾಹರಲಾಲ್ ನೆಹರು ಪ್ಲಾನೇಟೊರಿಯಮ್, ಲಾಲಬಾಗ್, ಕಬ್ಬನ್ ಪಾರ್ಕ್, ಅಕ್ವೇರಿಯಮ್, ವೆಂಕಟಪ್ಪಾ ಆರ್ಟ್ ಗ್ಯಾಲರಿ, ವಿಧಾನ ಸೌಧ ಮತ್ತು ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಗಳನ್ನು ಇಲ್ಲಿ ಕಾಣಬಹುದು. ಮುತ್ಯಾಲಮಡುವು (ಮುತ್ತಿನಕಣಿವೆ), ಮೈಸೂರು, ಶ್ರವಣಬೆಳಗೋಳ, ನಾಗರಹೊಳೆ, ಬಂಡಿಪುರ, ರಂಗನತಿಟ್ಟು, ಬೇಲೂರು, ಮಂಡ್ಯ, ಹಳೇಬೀಡು, ಚಿಕ್ಕಮಗಳೂರು, ಕೊಡಗು ಮುಂತಾದ ಸ್ಥಳಗಳಿಗೂ ಕೂಡ ಬೆಂಗಳೂರಿನಿಂದ ಆರಾಮವಾಗಿ ಪ್ರಯಾಣಿಸಬಹುದಾಗಿದೆ. ನಗರದಲ್ಲಿ ಇಳಿದುಕೊಳ್ಳಲು ಅನೇಕ ಆಯ್ಕೆಗಳಿದ್ದು, ಅವುಗಳಲ್ಲಿ ಲೀಲಾ ಪ್ಯಾಲೇಸ್, ಗೊಲ್ಡನ್ ಲ್ಯಾಂಡಮಾರ್ಕ್, ವಿಂಡ್ಸರ್ ಮ್ಯಾನರ್, ಲಿ ಮೇರಿಡಿಯನ್, ತಾಜ್ ಮತ್ತು ಲಲಿತ್ ಅಶೋಕ ಮುಂತಾದ ಹಲವು ಹೋಟೆಲ್ ಗಳು ಸೂಕ್ತ ಹಾಗು ದುಬಾರಿ ಬೆಲೆಗಳಲ್ಲಿ ಪ್ರವಾಸಿಗರಿಗೆ ಲಭ್ಯವಿವೆ. ಬಹುಮುಖಿಯ ಸಂಸ್ಕೃತಿಹೊಂದಿರುವ ಕಾರಣ, ವಿವಿಧ ಬಗೆಯ ಖಾದ್ಯಗಳನ್ನು ಕೂಡ ಇಲ್ಲಿ ಕಾಣಬಹುದು. ಬೀದಿ ತಿನಿಸುಗಳಿಂದ ಹಿಡಿದು ಅಂತಾರಾಷ್ಟ್ರೀಯ ಮಟ್ಟದವರೆಗಿನ ತಿನಿಸುಗಳು ಕೂಡ ಇಲ್ಲಿ ಲಭ್ಯ. ಬೆಂಗಳೂರಿನಾದ್ಯಂತ ಬಹುಸಂಖ್ಯೆಯಲ್ಲಿ ಮ್ಯಾಕ್ ಡೊನಾಲ್ಡ್, ಕೆ.ಎಫ್.ಸಿ ಮತ್ತು ಪೀಜ್ಜಾ ಹಟ್ ಗಳ ಔಟ್ ಲೆಟ್ ಗಳನ್ನು ಕಾಣಬಹುದಾಗಿದ್ದು, ಆಸಕ್ತಿಯುಳ್ಳ ಪ್ರವಾಸಿಗರು ಸ್ಥಳೀಯ ತಿಂಡಿತಿನಿಸುಗಳ ಕೇಂದ್ರವಾದ ಎಂ.ಟಿ.ಅರ್. ಗೂ ಕೂಡ ಭೇಟಿ ನೀಡಬಹುದು. ಇತರ ಅನೇಕ ಸ್ಥಳಗಳಲ್ಲಿ ಭಾರತದ ಬೇರೆ ಬೇರೆ ರಾಜ್ಯಗಳ ಖಾದ್ಯಗಳು ಲಭ್ಯವಿದ್ದು, ಉತ್ತರ ಅಥವಾ ಪೂರ್ವ ಭಾರತದ ಅಡುಗೆಗಳಿಗೆ ಯಾವುದೆ ಕೊರತೆಯಿಲ್ಲ. ಫೀನಿಕ್ಸ್ ಮಾಲ್, ದಿ ಫೋರಮ್, ಗರುಡಾ ಮಾಲ್, ಸೆಂಟ್ರಲ್ ,ಒರಾಯನ್ ಮಾಲ್, ಮತ್ತು ಮಂತ್ರಿ ಮಾಲ್ ಗಳಲ್ಲಿ, ದೇಶಿಯ ಹಾಗು ವಿದೇಶಿಯ ಉತ್ಪನ್ನಗಳು ಲಭ್ಯವಿದ್ದು ಖರೀದಿಗೆ ಯೋಗ್ಯವಾದ ಸ್ಥಳಗಳಾಗಿವೆ. ಎಂ.ಜಿ. ರಸ್ತೆಯಲ್ಲಿರುವ ಕಾವೇರಿ ಎಂಪೋರಿಯಮ್ ದೇಶೀಯ ಉತ್ಪನ್ನಗಳಾದ ಚಂದನದ ಸಾಮಗ್ರಿಗಳು, ಜನಪ್ರಿಯವಾದ ಚೆನ್ನಪಟ್ಟಣದ ಕಟ್ಟಿಗೆಯ ಬೊಂಬೆಗಳನ್ನು ಖರೀದಿಸಲು ಉತ್ತಮ ಸ್ಥಳವಾಗಿದೆ. ತುಡಿಯುತ್ತಿರುವ ಯುವಜನಾಂಗದ ಪರಿಣಾಮವಾಗಿ, ಬೆಂಗಳೂರಿನ ರಾತ್ರಿ ಜೀವನವು ಬಲು ಸೊಗಸಾಗಿರುತ್ತದೆ. ಜಗತ್ತಿನ ಕ್ರಿಯಾಶೀಲ ನಗರಗಳು ವಿಶ್ವದ ಕ್ರಿಯಾಶೀಲ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನ ಪಡೆದಿದೆ. ಜಿಎಲ್‍ಎಲ್ ಗ್ಲೋಬಲ್ ರಿಸರ್ಚ್ ಕಂಪನಿ ನಡೆಸಿದ ಸಮೀಕ್ಷೆಯ ಆಧಾರದಲ್ಲಿ ಈ ಪಟ್ಟಿಯನ್ನು ತಯಾರಿಸಲಾಗಿದೆ. ಶಿಕ್ಷಣ, ಮೂಲಸೌಕರ್ಯ, ಅಗಾಧವಾಗಿ ಬೆಳೆಯುತ್ತಿರುವ ಜನಸಂಖ್ಯೆಗೆ ಹೊಂದಿಕೊಳ್ಳುವುದು ಸೇರಿದಂತೆ ದೇಶದ ಪ್ರಗತಿಗೆ ತಮ್ಮ ಕಾಣಿಕೆಯನ್ನೂ ನೀಡುತ್ತಿರುವ ವಿಚಾರಗಳನ್ನಾಧರಿಸಿ ಜಗತ್ತಿನ ಮೂವತ್ತು ನಗರಗಳನ್ನು ಗುರುತಿಸಲಾಗಿದೆ. ಈ ಪಟ್ಟಿಯಲ್ಲಿ ಟಾಪ್ ೧೦ ಸ್ಥಾನದಲ್ಲಿರುವ ನಗರಗಳು. ೧ ಬೆಂಗಳೂರು ೨ ಹೋ ಚಿ ಮಿನಾ ಸಿಟಿ ೩ ಸಿಲಿಕಾನ್ ವ್ಯಾಲಿ ೪ ಶಾಂಘೈ ೫ ಹೈದ್ರಾಬಾದ್ ೬ ಲಂಡನ್ ೭ ಆಸ್ಟಿನ್g ೮ಹನೋಯಿ ೯ ಬೋಸ್ಟನ್ ೧೦ ನೈರೋಬಿ ದೇಶದ ಮೂರನೇ ಸಿರಿವಂತ ನಗರ ಬೆಂಗಳೂರು ೨೭ ಫೆಬ್ರುವರಿ, ೨೦೧೭ ಭಾರತದ ಅತ್ಯಂತ ಶ್ರೀಮಂತ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಮೂರನೇ ಸ್ಥಾನ ಪಡೆದಿದೆ. ದೇಶದ ಅತ್ಯಂತ ಶ್ರೀಮಂತ ನಗರ ಎಂಬ ಹೆಗ್ಗಳಿಕೆಗೆ ವಾಣಿಜ್ಯ ನಗರಿ ಮುಂಬೈ ಪಾತ್ರವಾಗಿದ್ದರೆ, ದೆಹಲಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಮುಂಬೈನ ಸಂಪತ್ತಿನ ಮೊತ್ತ ರೂ.೫೪.೬ ಲಕ್ಷ ಕೋಟಿ. ಇನ್ನು ದೆಹಲಿ ಮತ್ತು ಬೆಂಗಳೂರಿನ ಸಂಪತ್ತು ಕ್ರಮವಾಗಿ ರೂ.೨೯.೯ ಲಕ್ಷ ಕೋಟಿ ಮತ್ತು ರೂ.೨೧.೩ ಲಕ್ಷ ಕೋಟಿಯಷ್ಟಿದೆ. ಮಾರುಕಟ್ಟೆ ಸಂಶೋಧನಾ ಸಂಸ್ಥೆ, ನ್ಯೂ ವರ್ಲ್ಡ್‌ ವೆಲ್ತ್‌ ಬಿಡುಗಡೆ ಮಾಡಿರುವ ೨೦೧೬ನೇ ಸಾಲಿನ ವರದಿಯಲ್ಲಿ ಈ ಮಾಹಿತಿ ಇದೆ. ವಲಸೆ ಸ್ವದೇಶದಿಂದ ವಲಸೆ ಹೋಗುತ್ತಿರುವ ಸಿರಿವಂತರ ಸಂಖ್ಯೆಯಲ್ಲಿ ಭಾರಿ ಏರಿಕೆ ಆಗಿದೆ. ೨೦೧೬ರಲ್ಲಿ ವಿಶ್ವದಾದ್ಯಂತ ೮೨ ಸಾವಿರ, ಅತಿ ಸಿರಿವಂತರು ವಲಸೆ ಹೋಗಿದ್ದಾರೆ. ಈ ರೀತಿ ಅತಿ ಹೆಚ್ಚು ವಲಸೆ ಹೋದ ಮೊದಲ ಐದು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಇದೆ. ಈ ಸಾಲಿನಲ್ಲಿ ಒಟ್ಟು ೬ ಸಾವಿರ ಸಿರಿವಂತರು ತಮ್ಮ ವಾಸ್ತವ್ಯವನ್ನು ಭಾರತದಿಂದ ಬೇರೆ ದೇಶಗಳಿಗೆ ಬದಲಿಸಿದ್ದಾರೆ. ೨೦೧೫ನೇ ಸಾಲಿನಲ್ಲಿ ಹೀಗೆ ವಲಸೆ ಹೋದವರ ಸಂಖ್ಯೆ ೪ ಸಾವಿರ. ಹಿಂದಿನ ವರ್ಷಕ್ಕೆ ಹೋಲಿಸಿದರೆ ೨೦೧೬ರಲ್ಲಿ ವಲಸೆ ಹೋದ ಸಿರಿವಂತರ ಸಂಖ್ಯೆಯಲ್ಲಿ ಶೇ ೫೦ ರಷ್ಟು ಹೆಚ್ಚಳವಾಗಿದೆ. ಶತ ಕೋಟ್ಯಾಧಿಪತಿಗಳು ೧೦ ಲಕ್ಷ ಅಮೆರಿಕನ್ ಡಾಲರ್‌ನಿಂದ ೧೦೦ ಕೋಟಿ ಅಮೆರಿಕನ್ ಡಾಲರ್‌ವರೆಗೆ (ಸುಮಾರು ₹ ೬.೬ ಕೋಟಿಯಿಂದ ₹ ೬.೬ ಸಾವಿರ ಕೋಟಿ) ಸಂಪತ್ತು ಹೊಂದಿರುವವರನ್ನು ಮಿಲಿಯನೇರ್ ಅಥವಾ ಶತ ಕೋಟ್ಯಾಧಿಪತಿಗಳು ಎಂದು ನ್ಯೂ ವರ್ಲ್ಡ್‌ ವೆಲ್ತ್‌ ವರದಿಯಲ್ಲಿ ಪರಿಗಣಿಸಲಾಗಿದೆ. ೧೦೦ ಕೋಟಿ ಅಮರಿಕನ್‌ ಡಾಲರ್‌ಗಿಂತ (ಸು. ₹ ೬.೬ ಸಾವಿರ ಕೋಟಿ) ಹೆಚ್ಚು ಸಂಪತ್ತು ಇದ್ದವರನ್ನು ಬಿಲಿಯನೇರ್‌ ಅಥವಾ ಸಹಸ್ರ ಕೋಟ್ಯಾಧಿಪತಿಗಳು ಎಂದು ಕರೆಯಲಾಗಿದೆ. ಇದನ್ನೂ ನೋಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ಉತ್ತರ (ಲೋಕ ಸಭೆ ಚುನಾವಣಾ ಕ್ಷೇತ್ರ) ಬೆಂಗಳೂರು ಕೇಂದ್ರ (ಲೋಕ ಸಭೆ ಚುನಾವಣಾ ಕ್ಷೇತ್ರ) ಬೆಂಗಳೂರು ಗ್ರಾಮಾಂತರ (ಲೋಕ ಸಭೆ ಚುನಾವಣಾ ಕ್ಷೇತ್ರ) ಬೆಂಗಳೂರು ದಕ್ಷಿಣ (ಲೋಕ ಸಭೆ ಚುನಾವಣಾ ಕ್ಷೇತ್ರ) ನಮ್ಮ ಮೆಟ್ರೊ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬೆಂಗಳೂರು ಎಫ್ ಸಿ ಇತರೆ ಸಂಪರ್ಕ Interactive Map of Bangalore ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮಹಾನಗರ ಪಾಲಿಕೆ Bangalore cyber police ಇತರೆ ಇಲಾಖೆಗಳ ಸಂಪರ್ಕ ಪಟ್ಟಿ ಬೆಳದಿದೆ ನೊಡ ಬೆಂಗಳೂರು ನಗರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉಲ್ಲೇಖಗಳು visit: www.bangaloreitbt.in ಭಾರತದ ಪಟ್ಟಣಗಳು ಬೆಂಗಳೂರು ಕರ್ನಾಟಕದ ಪ್ರಮುಖ ಸ್ಥಳಗಳು ಮಹಾನಗರಪಾಲಿಕೆಗಳು
867
https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1%20%E0%B2%85%E0%B2%95%E0%B3%8D%E0%B2%B7%E0%B2%B0%E0%B2%AE%E0%B2%BE%E0%B2%B2%E0%B3%86
ಕನ್ನಡ ಅಕ್ಷರಮಾಲೆ
ಇತಿಹಾಸ ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ. ಈ ಲಿಪಿ ಎಡದಿಂದ ಬಲಕ್ಕೆ ಬರೆಯಲ್ಪಟ್ಟಿದ್ದು ಅದರಲ್ಲಿಯ ಸರಳ ಸುಂದರ, ಅಕ್ಷರಗಳು ಸುಲಭವಾಗಿ ಗುರುತಿಸುವಂತಿವೆ. ಈ ಅಕ್ಷರಗಳಿಗೆ ತಲೆಕಟ್ಟು ಇರುವುದಿಲ್ಲ. ಥ, ಪ, ಮ, ವ. ಲ, ಹ ಮುಂತಾದ ಅಕ್ಷರಗಳ ಬುಡಕಟ್ಟು ದುಂಡಾಗಿರುತ್ತವೆ. ಸಂಸ್ಕೃತ ಭಾಷೆಯ ಋ, ವಿಸರ್ಗ, ಜಿಹ್ವಾ ಮೂಲೀಯ ಮತ್ತು ಉಪಧ್ಮಾನೀಯಗಳನ್ನು ನಿರ್ದೇಶಿಸುವ ಸಂಜ್ಞೆಗಳಿರುವುದಿಲ್ಲ. ಅದರಂತೆ ಪದಾದಿಯ ದೀರ್ಘ ಈ ಕಾರವಿಲ್ಲ. ಕರ್ಣಾಟಕದಲ್ಲಿ ಅಶೋಕನ ಬಾಹ್ಮೀ ಲಿಪಿಯ ಶಾನಗಳು ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿ, ಸಿದ್ದಾಪುರ ಮತ್ತು ಜಟಿಂಗ ರಾಮೇಶ್ವರ ಎಂಬ ಸ್ಥಳಗಳಲ್ಲಿಯೂ ರಾಯಚೂರು ಜಿಲ್ಲೆಯ ಮಸ್ಕಿ, ಪಾಲ್ಕಗುಂಡು ಮತ್ತು ಗವಿಮಠ ಎಂಬ ಸ್ಥಳಗಳಲ್ಲಿಯೂ ದೊರೆತಿವೆ. ಅಶೋಕನ ಬ್ರಾಹ್ಮೀ ಲಿಪಿ ಮುಂದೆ 3ನೆಯ ಶತಮಾನದ ವರೆಗೆ ಶುಂಗ, ಕುಶಾನ, ಕ್ಷತ್ರಪ, ಆಂಧ್ರ, ಶಾತವಾಹನ ಮುಂತಾದ ಅರಸರ ಶಾಸನಗಳಲ್ಲಿ ಭಾರತದ ಬೇರೆ ಬೇರೆ ಭಾಗಗಳಲ್ಲಿ ವಿಕಾಸ ಹೊಂದಿರುತ್ತದೆ. ಕುಶಾನ ಕಾಲದ ಲಿಪಿಯ ಅಕ್ಷರಗಳು ಕಡಿಮೆ ಎತ್ತರವಾಗಿಯೂ ಅಗಲವಾಗಿಯೂ ದಪ್ಪವಾಗಿಯೂ ಇರುತ್ತವೆ. ಕ್ಷತ್ರಪ ಹಾಗೂ ಶಾತವಾಹನರ ಕಾಲದ ಲಿಪಿಗಳೂ ಹೆಚ್ಚು ಕಡಿಮೆ ಇದೇ ವೈಶಿಷ್ಟ್ಯಗಳನ್ನೊಳಗೊಂಡಿವೆ. ಕರ್ಣಾಟಕದಲ್ಲಿ ಅಶೋಕನ ಬ್ರಾಹ್ಮೀ ಲಿಪಿಯ ಮುಂದಿನ ಹಂತವನ್ನು 2-3ನೆಯ ಶತಮಾನದ ಮಳವಳ್ಳಿ ಮತ್ತು ಬನವಾಸಿಯ ಸಾತಕರ್ಣಿಯ ಶಾಸನಗಳಲ್ಲಿ ಕಾಣುತ್ತೇವೆ. ಇಲ್ಲಿಯೂ ಅಕ್ಷರಗಳ ಎತ್ತರ ಕಡಿಮೆಯಾಗಿದ್ದು ಕೆಲವು ಅಕ್ಷರಗಳಿಗೆ ತ್ರಿಕೋಣಾಕೃತಿಯುಳ್ಳ ತಲೆಕಟ್ಟು ಇರುತ್ತದೆ. ಅಗಲವಾದ ತುದಿಯುಳ್ಳ ಲೇಖನಿಯನ್ನು ಉಪಯೋಗಿಸಿದ್ದರಿಂದ ಇಂಥ ತಲೆಕಟ್ಟುಗಳು ತಲೆದೋರಿವೆಯೆಂದು ಕೆಲವು ವಿದ್ವಾಂಸರು ಹೇಳುತ್ತಾರೆ. ಅ, ಕ, ರ ಮುಂತಾದ ಅಕ್ಷರಗಳ ಲಂಬರೇಖೆಯ ಕೆಳಭಾಗ ವೃತ್ತಾಕಾರವಾಗಿ ಎಡಗಡೆ ಹೊರಳಿದೆ. ಇತ್ತೀಚೆಗೆ ಗುಲ್ಬರ್ಗಾ ಜಿಲ್ಲೆಯ ಸನ್ನತಿ ಎಂಬ ಸ್ಥಳದಲ್ಲಿ ದೊರೆತ 3ನೆಯ ಶತಮಾನದ ಶಾನಗಳಲ್ಲಿಯ ಕೆಲವು ಅಕ್ಷರಗಳು ಆಂಧ್ರಪ್ರದೇಶದ ನಾಗಾರ್ಜುನ ಕೊಂಡದ ಇಕ್ಷ್ವಾಕು ಅರಸರ ಶಾಸನಗಳ ಅಕ್ಷರಗಳಂತೆ ಸುಂದರವಾಗಿಯೂ ಅಂಕಾರಯುತವಾಗಿಯೂ ಕೆತ್ತಲ್ಪಟ್ಟಿವೆ. 10-12ನೆಯ ಶತಮಾನ ಕನ್ನಡ ಲಿಪಿ 10-12ನೆಯ ಶತಮಾನದಲ್ಲಿ ಕಲ್ಯಾಣಿ ಚಾಳುಕ್ಯರ ಶಾಸನಗಳಲ್ಲಿ ವಿಶೇಷ ಬದಲಾವಣೆಯನ್ನು ಹೊಂದಿ ಒಂದು ಮುಖ್ಯವಾದ ಹಂತವನ್ನು ಸೂಚಿಸುತ್ತಿವೆ. ಈ ಕಾಲದ ಕೆಲವು ಅಕ್ಷರಗಳು ಇನ್ನಷ್ಟು ದುಂಡಾಗಿದ್ದು ಆಧುನಿಕ ಕನ್ನಡ ಲಿಪಿಯ ಅಕ್ಷರಗಳ ಲಕ್ಷಣಗಳನ್ನು ವ್ಯಕ್ತಪಡಿಸುತ್ತದೆ. ಉದಾಹರಣೆಗಾಗಿ ಕ, ರ, ಯ ಮುಂತಾದ ಅಕ್ಷರಗಳ ಮೈಕಟ್ಟು ಹೆಚ್ಚು ಕಡಿಮೆ ಈಗಿನಂತೆಯೇ ಇದೆ. ಕೆಲವು ಅಕ್ಷರಗಳ ತಲೆಕಟ್ಟು ಕೋನಾಕೃತಿಯುಳ್ಳದಾಗಿದೆ. ಚ, ವ, ಮ ಮುಂತಾದ ಅಕ್ಷರಗಳ ತಲೆಕಟ್ಟಿನ ಭಾಗ ಎರಡು ಭಾಗವಾಗಿ ಬೇರ್ಪಡೆಯಾಗಿದ್ದು ತಲೆಕಟ್ಟು ಬಲಭಾಗದ ರೇಖೆಗೆ ಹೊಂದಿ ಕೊಂಡಿರುತ್ತದೆ. ಅನೇಕ ಅಕ್ಷರಗಳ ತಲೆಕಟ್ಟು ಸ್ಪಷ್ಟವಾಗಿ ಎದ್ದುಕಾಣುವಂತಿದೆ. ಮುಂದೆ 12-13ನೆಯ ಶತಮಾನದಲ್ಲಿ ಹೊಯ್ಸಳ ಅರಸರ ಅನೇಕ ಶಾಸನಗಳನ್ನು ನುಣುಪಾದ ಕಲ್ಲಿನ ಹಲಗೆಗಳ ಮೇಲೆ ಅಲಂಕಾರಯುತವಾಗಿಯೂ ಕಲಾತ್ಮಕವಾಗಿಯೂ ಬರೆಯಲ್ಪಟ್ಟಿದ್ದು ಅಲ್ಲಿಯ ಅಕ್ಷರಗಳು ಬಹು ಸುಂದರವಾಗಿ ಕಾಣುತ್ತವೆ. ಈ ಅಕ್ಷರಗಳನ್ನು ಸ್ಪಷ್ಟವಾಗಿಯೂ ಹೆಚ್ಚು ದುಂಡಾಗಿಯೂ ಬರೆಯಲಾಗಿದೆ. ಇಲ್ಲಿ ಕನ್ನಡ ಲಿಪಿ ಊರ್ಜಿತಾವಸ್ಥೆಯನ್ನು ಹೊಂದಿದೆಯೆಂದು ಹೇಳಬಹುದು. ಆದರೆ ಮುಂದಿನ 2-3 ಶತಮಾನಗಳ ಕಾಲದಲ್ಲಿ ಅಂದರೆ 14-16ನೆಯ ಶತಮಾನದ ವಿಜಯನಗರ ಅರಸರ ಶಾಸನಗಳಲ್ಲಿ ಅಕ್ಷರಗಳನ್ನು ಡೊಂಕು ಡೊಂಕಾಗಿ ಬರೆಯಲಾಗಿದ್ದು ಅವುಗಳ ಜೋಡಣೆಯ ವಿಷಯದಲ್ಲಿ ಅಷ್ಟು ಗಮನವನ್ನಿತ್ತಿಲ್ಲ. ಆದುದರಿಂದ ಕಲ್ಯಾಣಿ ಚಾಳುಕ್ಯ ಹಾಗೂ ಹೊಯ್ಸಳರ ಕಾಲದ ಲಿಪಿಯ ಅಕ್ಷರಗಳಂತೆ ವಿಜನಗರ ಕಾಲದ ಲಿಪಿಯ ಅಕ್ಷರಗಳು ಅಂದವಾಗಿ ಕಾಣುವುದಿಲ್ಲ. ಆದರೂ ಈ ಕಾಲದ ಲಿಪಿಯ ಅಕ್ಷರಗಳು ಕನ್ನಡ ಲಿಪಿಯ ಬೆಳೆವಣಿಗೆಯ ದೃಷ್ಟಿಯಿಂದ ಗಮನಾರ್ಹವಾಗಿದೆ. ಅ, ಞ, ಣ, ಷ, ಳ ಮುಂತಾದ ಅಕ್ಷರಗಳು ಈಗಿನ ರೂಪಗಳನ್ನು ಹೆಚ್ಚಾಗಿ ಹೋಲುತ್ತವೆ. ದ, ಡ, ಪ ಮುಂತಾದ ಅಲ್ಪಪ್ರಾಣದ ಅಕ್ಷರಗಳಿಗೆ ಕೆಳಗಡೆ ಒಂದು ರೇಖೆಯನ್ನು ಸೇರಿಸಿ ಧ, ಢ, ಫ, ಮುಂತಾದ ಮಹಾಪ್ರಾಣಗಳ ಸಂಜ್ಞೆಗಳನ್ನು ಸೂಚಿಸಲಾಗಿದೆ. ಇದುವರೆಗೆ ಅಕ್ಷರಗಳ ಮೇಲ್ಭಾಗದಲ್ಲಿ ಒಂದು ಚುಕ್ಕೆ ಅಥವಾ ಚಿಕ್ಕ ಬಿಂದುವಿನಿಂದ ಸೂಚಿಸಲ್ಪಡುತ್ತಿದ್ದ ಅನುಸ್ವಾರವನ್ನು ಆಯಾ ಅಕ್ಷರಗಳ ಬಲಗಡೆಗೆ ಅಷ್ಟೇ ಗಾತ್ರದ ಬಿಂದುವಿನಿಂದ ತೋರಿಸಲಾಗಿದೆ. 18ನೆಯ ಶತಮಾನದಲ್ಲಿ ಮೈಸೂರು ಅರಸರ ಕಾಲದಲ್ಲಿ ಕನ್ನಡ ಲಿಪಿ ವಿಜಯನಗರ ಕಾಲದ ಅಕ್ಷರಗಳ ಕೆಲವು ಲಕ್ಷಣಗಳನ್ನು ಉಳಿಸಿಕೊಂಡಿದ್ದರೂ ಆಧುನಿಕ ಕನ್ನಡ ಲಿಪಿಗೆ ಬಹಳ ಹತ್ತಿರಬಾಗಿ ತೋರುತ್ತದೆ. ಇತ್ತೀಚೆಗೆ ಮುದ್ರಣ ಬಂದಮೇಲೆ ಇತರ ಲಿಪಿಗಳಂತೆ ಕನ್ನಡ ಲಿಪಿಯಾದರೂ ಒಂದು ಸ್ಥಿರತೆಯನ್ನು ಹೊಂದಿದ್ದರಿಂದ ಹೆಚ್ಚಿನ ವಿಕಾಸಕ್ಕೆ ಅಸ್ಪದವಿಲ್ಲದಂತಾಗಿದೆ. ಆದರೂ ಮುದ್ರಣದ ಲಿಪಿಯಲ್ಲಿ ಸಹ ಕಾಲಕಾಲಕ್ಕೆ ಕೆಲವು ಸುಧಾರಣೆಗಳನ್ನು ಮಾಡಿಕೊಂಡು ಹೆಚ್ಚಿನ ಅಂದವಾದ ಅಕ್ಷರಗಳನ್ನು ಅಚ್ಚು ಹಾಕುತ್ತಿರುವುದನ್ನು ನೋಡುತ್ತೇವೆ. ಪರಿಣಾಮ ಕನ್ನಡ ಲಿಪಿಯ ಒಂದು ವೈಶಿಷ್ಟ್ಯವೆಂದರೆ ಪ್ರಾಚೀನಕಾಲದಿಂದಲೂ ಕಾಗುಣಿತಾಕ್ಷರದ ಹೃಸ್ವ ಮತ್ತು ದೀರ್ಘ ಎ ಮತ್ತು ಏ ಕಾರಗಳನ್ನು ಹಾಗೂ ಒ ಮತ್ತು ಓ ಕಾರಗಳನ್ನು ಒಂದೇ ಸಂಜ್ಞೆಯಿಂದ ಸೂಚಿಸುತ್ತಿದ್ದು ಅವುಗಳಲ್ಲಿಯ ಹೃಸ್ವ ಮತ್ತು ದೀರ್ಘ ವರ್ಣಗಳ ಭೇದವನ್ನು ಸಂದರ್ಭಾನುಸಾರವಾಗಿ ತಿಳಿದುಕೊಳ್ಳಬೇಕಾಗಿತ್ತು. ಇತ್ತೀಚೆಗೆ ಅಂದರೆ 17-18ನೆಯ ಶತಮಾನದಂದೀಚೆಗೆ ಮಾತ್ರ ಕಾಗುಣಿತಾಕ್ಷರದ ದೀರ್ಘ ಏ ಕಾರ, ದೀರ್ಘ, ಓ ಕಾರ ಮತ್ತು ದೀರ್ಘ ಈ ಕಾರಗಳನ್ನು ಆಯಾ ಅಕ್ಷರಗಳ ಬಲಗಡೆ ಕೋಡಿಯುಳ್ಳ ಒಂದು ರೇಖೆಯಿಂದ ಸೂಚಿಸಲಾಗಿದೆ. ಇನ್ನು 4-5ನೆಯ ಶತಮಾನದಿಂದ 13-14ನೆಯ ಶತಮಾನದವರೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಶಾಸನಗಳಲ್ಲಿ ಸುಮಾರು ಒಂದೇ ಮಾದರಿಯ ಲಿಪಿಯನ್ನು ಉಪಯೋಗಿಸಿದ್ದುದರಿಂದ ಇವೆರಡೂ ಭಾಗದ ಲಿಪಿಗಳಿಗೆ ಕನ್ನಡ ತೆಲುಗು ಲಿಪಿಯೆಂದು ಹೇಳುವುದುಂಟು. ಅದರಲ್ಲೂ ವಿಶೇಷವಾಗಿ ಬಾದಾಮಿ ಚಳುಕ್ಯ, ರಾಷ್ಟ್ರಕೂಟ ಮತ್ತು ಕಲ್ಯಾಣಿ ಚಾಳುಕ್ಯರ ಕಾಲದ ಕನ್ನಡ ತೆಲುಗು ಲಿಪಿ ಒಂದೇ ಸ್ವರೂಪದ್ದಾಗಿದೆಯೆಂದು ಹೇಳಬಹುದು. 14-15ನೆಯ ಶತಮಾನಗಳಲ್ಲಿ ಕನ್ನಡ ಮತ್ತು ತೆಲುಗು ಲಿಪಿಗಳಲ್ಲಿ ಕೆಲವು ವ್ಯತ್ಯಾಸಗಳು ತಲೆದೋರಿದ್ದು ಮುಂದಿನ ಎರಡು ಮೂರು ಶತಮಾನಗಳಲ್ಲಿ ಗಮನಾರ್ಹವಾದ ಭೇದಗಳು ಕಂಡುಬರುತ್ತವೆ. ಆದರೂ ಅಲ್ಪ ಪ್ರಯತ್ನದಿಂದ ಕನ್ನಡಿಗರು ತೆಲುಗು ಲಿಪಿಯನ್ನೂ ಅದರಂತೆ ಆಂಧ್ರರು ಕನ್ನಡ ಲಿಪಿಯನ್ನೂ ಸುಲಭವಾಗಿ ತಿಳಿದುಕೊಳ್ಳಬಹುದು. ಬಾದಾಮಿ ಚಳುಕ್ಯರ ಕಾಲದಲ್ಲ ಕನ್ನಡ ಲಿಪಿ ಮಹಾರಾಷ್ಟ್ರ ಮತ್ತು ಗುಜರಾತ್ ಪ್ರಾಂತ್ಯಗಳಲ್ಲಿಯೂ ಪ್ರಚಲಿತವಿದ್ದು ಮುಂದೆ ಅಲ್ಲಿ ನಾಗರೀ ಲಿಪಿ ಬಳಕೆಗೆ ಬಂತು. * ಅಂತೂ ಮೇಲಿನ ವಿವೇಚನೆಯಿಂದ ಕನ್ನಡ ಲಿಪಿ ಸು. 2000 ವರ್ಷಕ್ಕೂ ಹೆಚ್ಚಿನ ಪರಂಪರೆಯುಳ್ಳದ್ದಾಗಿದೆಯೆಂದು ವಿಶದವಾಗುತ್ತದೆ. ಒಂದು ಲಿಪಿಯ ಹುಟ್ಟು ಮತ್ತು ಬೆಳೆವಣಿಗೆ ಅದನ್ನು ಉಪಯೋಗಿಸುವ ಜನರ ಸಂಸ್ಕೃತಿಯ ಪ್ರತೀಕವಾಗಿರುತ್ತದೆ. ಒಂದು ಆದರ್ಶ ಲಿಪಿಯಲ್ಲಿ ಪ್ರತಿಯೊಂದು ಶಬ್ದದ ಉಚ್ಚಾರಣೆಗೆ ಅಸಂದಿಗ್ಧವಾದ ಸಂಜ್ಞೆಯಿರಬೇಕು. ಬರೆದಂತೆ ಓದುವಂತಿರಬೇಕು. ಓದಿದಂತೆ ಬರೆಯುವಂತೆಯೂ ಇರಬೇಕು. ಅಂದರೆ ಉಚ್ಚಾರಿತ ಅಕ್ಷರ ಹಾಗೂ ಲಿಖಿತ ವರ್ಣ ಇವುಗಳ ಸಂಬಂಧ ಸಂಪುರ್ಣವಿರಬೇಕು. ಈ ದೃಷ್ಟಿಯಿಂದ ವಿಚಾರಿಸಿದರೆ ಕನ್ನಡ ಲಿಪಿ ಪರಿಪುರ್ಣತೆಯನ್ನು ಪಡೆದಿದೆಯೆಂದು ಹೇಳಬಹುದು. ಈ ಲಿಪಿಯಲ್ಲಿ ಸ್ವರ ಮತ್ತು ವ್ಯಂಜನಗಳು ಪುರ್ಣವಾಗಿದ್ದು ಆರ್ಯ ಮತ್ತು ದ್ರಾವಿಡ ಭಾಷೆಗಳ ಧ್ವನಿಗಳನ್ನು ಕೊರತೆಯಿಲ್ಲದೆ ಸೂಚಿಸಲಿಕ್ಕೆ ಉಪಯುಕ್ತವಾದ ಸಂಕೇತಗಳಿವೆ. ವ್ಯಂಜನಾಕ್ಷರಗಳೊಡನೆ ಸ್ವರಗಳ ಸುಂದರವಾದ ಸಂಯೋಗವಿದೆ. ಹೀಗೆ ಕನ್ನಡ ಲಿಪಿ ಅಶೋಕನ ಬ್ರಾಹ್ಮೀಲಿಪಿಯಿಂದ ಉದ್ಬವಿಸಿ ಕಾಲಕ್ರಮದಿಂದ ಅನೇಕ ಮಾರ್ಪಾಟುಗಳನ್ನು ಹೊಂದಿ ವೈವಿಧ್ಯಪುರ್ಣವಾದ ವಿಕಾಸವನ್ನು ಪಡೆದು ಸಾಹಿತ್ಯ-ಸಂಸ್ಕೃತಿಗಳ ಹಿರಿಮೆಯನ್ನು ವ್ಯಕ್ತಪಡಿಸುತ್ತದೆ. ಕನ್ನಡ ವರ್ಣಮಾಲೆಯ ಪ್ರತಿಯೊಂದು ಅಕ್ಷರದ ಉಗಮ, ವಿಕಾಸ, ಉಚ್ಚಾರಣೆ ಮುಂತಾದ ವಿವರಗಳು ಆಯಾ ಅಕ್ಷರಗಳ ಶೀರ್ಷಿಕೆಗಳಲ್ಲಿ ಬಂದಿವೆ. ಅವನ್ನು ನೋಡಬಹುದು. ಈಚೆಗೆ ಪರಭಾಷೆಯ ಪದಗಳನ್ನು ಎರವಲಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಒದಗಿಬಂದುದರಿಂದ ಈಚಿಣheಡಿ, ಈಚಿisಚಿಟ, Zoo, ಒಚಿಟಿ ಮೊದಲಾದುವನ್ನು; ಬರೆಯಲು ವಿಶಿಷ್ಟ ಸಂಜ್ಞೆಗಳನ್ನು ಬಳಸಲಾಗುತ್ತಿದೆ. ಉದಾ : ಫಾದರ್, ಫೈಸಲ್ ಜóÆ, ಮ್ಯಾನ್-ಹೀಗೆ. ಸಂಜ್ಞಾ ಪ್ರಕರಣ ಕೇಶಿರಾಜನ ಸೂತ್ರದ ಪ್ರಕಾರ, ಅಕ್ಷರ ಮಾಲೆ/ವರ್ಣಮಾಲೆ ಎಂಬುದು ಒಂದು ಸಂಜ್ಞಾ ಪ್ರಕಾರವಾಗಿದೆ. ಕವಿಗಳ್ ಸ್ವರದಿಂ ವರ್ಗದಿ ನವರ್ಗದಿಂ ಯೋಗವಾಹದಿಂ ದೇಶಿಯಳು ದ್ಭವಮಪ್ಪ ವರ್ಣದಿಂ ಪಂ ಚ ವಿಧಂ ತಾನೆಂದು ತಿಳಿಸುವರ್ ಶುದ್ಧಗೆಯಂ (ಸೂತ್ರ ವಿವರಣೆ:ಕವಿಗಳು ಸ್ವರದಿಂದ, ವರ್ಗಾಕ್ಷರಗಳಿಂದ, ಅವರ್ಗೀಯ ಅಕ್ಷರಗಳಿಂದ, ಯೋಗವಾಹ ಅಕ್ಷರದಿಂದದಿಂದ, ಮತ್ತು ದೇಶಿಯ ಅಕ್ಷರಗಳಿಂದ ಹುಟ್ಟಿರುವ ಐದು ವಿಧದ ಅಕ್ಷರಗಳನ್ನು ಶುದ್ಧಗೆ ಎಂದು ಹೇಳುತ್ತಾರೆ) (ಸೂತ್ರಸಂಖ್ಯೆ – ೪೧) ಕನ್ನಡದ ಶುದ್ಧಾಕ್ಷರಗಳ ವಿಧಗಳು ಕೇಶಿರಾಜನ ಪ್ರಕಾರ ಕನ್ನಡ ಶುದ್ಧಗೆಯಲ್ಲಿ ಐದು ವಿಧಗಳು. ಅವುಗಳು ಕ್ರಮವಾಗಿ : ಸ್ವರ ಅಕ್ಷರಗಳು, ವರ್ಗೀಯ ವ್ಯಂಜನ ಅಕ್ಷರಗಳು, ಅವರ್ಗೀಯ ವ್ಯಂಜನ ಅಕ್ಷರಗಳು, ಯೋಗವಾಹ ಅಕ್ಷರಗಳು, ದೇಶಿಯ ಅಕ್ಷರಗಳು. ಆದರೆ ಕನ್ನಡ ಪಠ್ಯಾನುಸಾರ ಪ್ರಾಥಮಿಕ ಮತ್ತು ಮಾಧ್ಯಮಿಕ ತರಗತಿಯ ವಿದ್ಯಾರ್ಥಿಗಳು ಒಟ್ಟು ಕನ್ನಡ ಅಕ್ಷರಗಳನ್ನು ಈ ಕೆಳಗಿನಂತೆ ಗ್ರಹಿಸಿಕೊಂಡಿದ್ದಾರೆ. ಈ ರೀತಿ ಕನ್ನಡದಲ್ಲಿ ೫೧ ಅಕ್ಷರಗಳಿವೆ. ಪ್ರಸ್ತುತ ಕನ್ನಡದಲ್ಲಿ ಬಳಸುತ್ತಿರುವುದು ೪೯ ಅಕ್ಷರಗಳು. ಕನ್ನಡ ವರ್ಣಮಾಲೆ ಕನ್ನಡ ವರ್ಣಮಾಲೆಯಲ್ಲಿ ೪೯ಅಕ್ಷರಗಳಿವೆ. ಅವುಗಳನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. ಸ್ವರಗಳು -೧೩ ವ್ಯಂಜನಗಳು -೩೪ ಯೋಗವಾಹಗಳು-೦೨ ಸ್ವರ ಬೇರೊಂದು ಅಕ್ಷರದ ಸಹಾಯವಿಲ್ಲದೆ ಸ್ವತಂತ್ರವಾಗಿ ಉಚ್ಛರಿಸಲು ಬರುವ ವರ್ಣಮಾಲೆಯ ಮೊದಲ ಹದಿಮೂರು ಅಕ್ಷರಗಳನ್ನು ಸ್ವರ ಎಂದು ಕರೆಯುತ್ತಾರೆ. ಸ್ವರಗಳಲ್ಲಿ ಎರಡು ವಿಧ. ಅವು ಯಾವುವೆಂದರೆ ಹೃಸ್ವ ಸ್ವರಗಳು ಹಾಗೂ ದೀರ್ಘ ಸ್ವರ ಹೃಸ್ವ ಸ್ವರ ಹೃಸ್ವ ಸ್ವರಗಳು (೬)ಆರು. ಒಂದು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ವರ್ಣಮಾಲೆಯ ಆರು ಅಕ್ಷರಗಳನ್ನು(ಅ,ಇ ಉ,ಋ,ಎ,ಒ) ಹೃಸ್ವ ಸ್ವರಗಳೆಂದು ಕರೆಯುವರು. ದೀರ್ಘ ಸ್ವರ ಎರಡು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ವರ್ಣಮಾಲೆಯ (೭)ಏಳು ಅಕ್ಷರಗಳನ್ನು (ಆ,ಈ,ಊ,ಏ.ಐ.ಓ,ಔ) ದೀರ್ಘ ಸ್ವರಗಳೆಂದು ಕರೆಯುವರು. ವ್ಯಂಜನ ಬೇರೊಂದು ಅಕ್ಷರದ ಸಹಾಯವಿಲ್ಲದೆ ಸ್ವತಂತ್ರವಾಗಿ ಉಚ್ಛರಿಸಲು ಬಾರದ ವರ್ಣಮಾಲೆಯ(೩೪) ಮುವತ್ತು ನಾಲ್ಕು ಅಕ್ಷರಗಳನ್ನು ವ್ಯಂಜನಗಳೆಂದು ಕರೆಯುವರು. ಪ್ರಮುಖವಾಗಿ ವ್ಯಂಜನಗಳಲ್ಲಿ ಎರಡು ವಿಧ. ಅವು ಯಾವುವೆಂದರೆ ವರ್ಗೀಯ ವ್ಯಂಜನಗಳು(೨೫: ಕ,ಚ,ಟ,ತ,ಪ-ವರ್ಗಗಳು) ಮತ್ತು ಅವರ್ಗೀಯ ವ್ಯಂಜನಗಳು(೯-ಯ ಇಂದ ಳ ವರೆಗೆ) ವರ್ಗೀಯ ವ್ಯಂಜನ ಒಂದು ವರ್ಗ ಅಥವಾ ಗುಂಪಿಗೆ ಸೇರಿಸಬಹುದಾದ ವರ್ಣಮಾಲೆಯ ಇಪ್ಪತ್ತೈದು(೨೫) ಅಕ್ಷರಗಳನ್ನು ವರ್ಗೀಯ ವ್ಯಂಜನ ಎಂದು ಕರೆಯುವರು. ಅವು ಯಾವುವೆಂದರೆ, ಕ-ವರ್ಗ = ಕ, ಖ, ಗ, ಘ, ಙ ಚ-ವರ್ಗ = ಚ, ಛ, ಜ, ಝ, ಞ ಟ-ವರ್ಗ = ಟ, ಠ, ಡ, ಢ, ಣ ತ-ವರ್ಗ = ತ, ಥ, ದ, ಧ, ನ ಪ-ವರ್ಗ = ಪ, ಫ, ಬ, ಭ, ಮ ಅವರ್ಗೀಯ ವ್ಯಂಜನ ಒಂದು ಗುಂಪು ಅಥವಾ ಒಂದು ವರ್ಗಕ್ಕೆ ಸೇರಿಸಲು ಬಾರದ ವರ್ಣಮಾಲೆಯ ಕೊನೆಯ ಒಂಬತ್ತು ಅಕ್ಷರಗಳನ್ನು ಅವರ್ಗೀಯ ವ್ಯಂಜನಗಳೆಂದು ಕರೆಯುತ್ತಾರೆ. ಅವು ಯಾವುವೆಂದರೆ- ಯ,ರ,ಲ,ವ,ಶ,ಷ,ಸ,ಹ,ಳ. ಕನ್ನಡ ಒತ್ತಕ್ಷರಗಳು ಕನ್ನಡ ಒತ್ತಕ್ಷರಗಳು (೩೪)ಮುವತ್ನಾಲ್ಕು. ಅವು ಯಾವುವೆಂದರೆ: ಕ್ಕ ಖ್ಖ ಗ್ಗ ಘ್ಘ ಙ್ಙ ಚ್ಚ ಛ್ಛ ಜ್ಜ ಝ್ಝ ಞ್ಞ ಟ್ಟ ಠ್ಠ ಡ್ಡ ಢ್ಢ ಣ್ಣ ತ್ತ ಥ್ಥ ದ್ದ ಧ್ಧ ನ್ನ ಪ್ಪ ಫ್ಫ ಬ್ಬ ಭ್ಭ ಮ್ಮ ಯ್ಯ ರ್ರ ಲ್ಲ ವ್ವ ಶ್ಶ ಷ್ಷ ಸ್ಸ ಹ್ಹ ಳ್ಳ ಯೋಗವಾಹಗಳು ಸ್ವತಂತ್ರವಲ್ಲದ ಹಾಗೂ ಸ್ವರವೂ ಅಲ್ಲದ,ವ್ಯಂಜನವೂ ಅಲ್ಲದ ಸ್ವರಾಕ್ಷರಗಳ ಅಂತ್ಯದಲ್ಲಿನ ಹಾಗೂ ವ್ಯಂಜನಗಳ ಆರಂಭಾಕ್ಷರಗಳ ನಡುವಿನ ಎರಡು ಅಕ್ಷರಗಳನ್ನು (ಅನುಸ್ವಾರ-೦,ವಿಸರ್ಗ-ಃ)ಯೋಗವಾಹಗಳೆಂದು ಕರೆಯುತ್ತಾರೆ. ಕರ್ನಾಟಕ ಸರ್ಕಾರವು ತನ್ನ ಪಠ್ಯ ಕ್ರಮದಿಂದ ೠ ಸ್ವರವನ್ನು ಕನ್ನಡ ವರ್ಣಮಾಲೆಯಿಂದ ೧೯೯೦ ರಲ್ಲಿ ಬಿಟ್ಟಿತು. ಹಳೆಗನ್ನಡದ ಮೂರು ಅಕ್ಷರಗಳಾದ ಱ, ೞ ಮತ್ತು (ನ್, ಇದಕ್ಕೆ ಯೂನಿಕೋಡ್ ಇಲ್ಲ) ಇವನ್ನು ಇಂದು ಹೆಚ್ಚಾಗಿ ಬಳಸುತ್ತಿಲ್ಲವಾದರೂ ಹಳೆಗನ್ನಡವನ್ನು ಓದಲು ಇವನ್ನು ತಿಳಿದಿರಬೇಕು. ಇಂಗ್ಲಿಷ್‌ನ F ಮತ್ತು Z ಅಕ್ಷರಗಳಿಗೆ ಫ಼ ಮತ್ತು ಜ಼ (ಫ ಮತ್ತು ಜ) ಹೊಸ ಅಕ್ಷರಗಳು ಉಪಯೋಗಕ್ಕೆ ಬಂದಿವೆ. ಆದರೆ ಅವುಗಳನ್ನು ಕನ್ನಡ ವರ್ಣಮಾಲೆಯಲ್ಲಿ ಸೇರಿಸಿಲ್ಲ. ಸ್ವರಗಳು ಕನ್ನಡದಲ್ಲಿ ಒಟ್ಟು ೧೩ ಸ್ವರಗಳಿವೆ. ಅವನ್ನು "ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ" ಹೀಗೆ 'ಅ'ಕಾರದಿಂದ ಮೊದಲು ಮಾಡಿ, 'ಔ'ಕಾರದ ವರೆಗೆ ಕೊನೆ ಮಾಡಿ, ಹೀಗೆ ಬರೆಯುವುದು ಸಂಸ್ಕೃತ ವ್ಯಾಕರಣದ ಅನುಕರಣೆ. ಸಂಸ್ಕೃತದಲ್ಲಿ ಈ ಬಗೆಯಲ್ಲಿ ಬರೆಯಲು ಕಾರಣ ಅದರ ಮಾಹೇಶ್ವರ ಸೂತ್ರ ಮತ್ತು ಸಂಧಿನಿಯಮಗಳು. ಆದರೆ ಹೀಗೆ ಬರೆಯುವುದರಿಂದ ಕನ್ನಡದ ಸಂಧಿನಿಯಮಗಳನ್ನು ಅರಿಯಲು ಯಾವ ಅನುಕೂಲವೂ ಆಗುವುದಿಲ್ಲವೆಂಬ ಅಭಿಪ್ರಾಯವಿದೆ. "ಇ ಈ ಎ ಏ ಉ ಊ ಒ ಓ ಅ ಆ" ಎಂದು ಇನ್ನೊಂದು ಬಗೆಯಲ್ಲಿಯೂ ಬರೆಯುವುದುಂಟು. ಇಲ್ಲಿ ಸ್ವರಗಳನ್ನು ನಾಲಗೆಯ ತುದಿಯಿಂದ ಕೊನೆಯ ತನಕ ಅವುಗಳು ಹೊರಡುವ ನಾಲಗೆಯ ಭಾಗಕ್ಕೆ ಅನುಕ್ರಮವಾಗಿ ಬರೆಯಲಾಗಿದೆ. ಅಂದರೆ "ಇ ಈ" ನಾಲಗೆಯ ತುತ್ತುದಿಯಿಂದ ಉಲಿದರೆ, "ಅ ಆ" ನಾಲಗೆಯ ಕಟ್ಟಕಡೆಯಲ್ಲಿ ಹೊರಡುವುದು. ೠ, ಱ, ೞ ಗಳನ್ನು ಬಿಟ್ಟಮಾತ್ರಕ್ಕೆ ಆ ಅಕ್ಷರಗಳು ಕನ್ನಡದಲ್ಲಿ ಇಲ್ಲ ಅಥವಾ ಜನರಿಗೆ ಉಚ್ಚರಿಸಲಾಗದೆಂದು ಹೇಳಲಾಗದು. ಸ್ವರಗಳಲ್ಲಿ ನಾಲ್ಕು ವಿಧ ಹೃಸ್ವಸ್ವರ/ಗಿಡ್ಡಸ್ವರ : ಒಂದು ಮಾತ್ರೆಯ ಕಾಲಾವಧಿಯಲ್ಲಿ ಉಚ್ಛರಿಸುವ ಅಕ್ಷರ. ಹೃಸ್ವ ಅಂದರೆ ಚಿಕ್ಕದು. ಒಂದು ಹ್ರಸ್ವ ಸ್ವರವನ್ನು ಉಳಿಯಲು (ಉಚ್ಚಾರ ಮಾಡಲು) ಬರಿ ಒಂದು ಮಾತ್ರೆಯಷ್ಟು( ಒಂದು ಸರತಿ ಕಣ್ಣು ಮಿಟುಕುವಷ್ಟು/ಎವೆಯಿಕ್ಕುವಷ್ಟು ) ಹೊತ್ತು ಬೇಕಾಗುವುದು. ಹೃಸ್ವ ಸ್ವರಗಳು : ಅ ಇ ಉ ಋ ಎ ಒ ದೀರ್ಘಸ್ವರ/ಉದ್ದಸ್ವರ. : ಎರಡು ಮಾತ್ರೆಯ ಕಾಲಾವಧಿಯಲ್ಲಿ ಉಚ್ಛರಿಸುವ ಅಕ್ಷರ. ದೀರ್ಘ ಅಂದರೆ ಉದ್ದದ್ದು ಎಂದು. ಒಂದು ದೀರ್ಘ ಸ್ವರವನ್ನು ಉಲಿಯಲು ಎರಡು ಮಾತ್ರೆಯಷ್ಟು(ಎರಡು ಸರತಿ ಕಣ್ಣು ಮಿಟುಕುವಷ್ಟು/ಎವೆಯಿಕ್ಕುವಷ್ಟು) ಹೊತ್ತು ಬೇಕಾಗುವುದು. ದೀರ್ಘ ಸ್ವರಗಳು: ಆ ಈ ಊ ಏ ಐ ಓ ಔ ಪ್ಲುತ ಸ್ವರ : ಮೂರು ಇಲ್ಲವೆ, ಅದಕ್ಕಿಂತ ಹೆಚ್ಚು ಮಾತ್ರೆಗಳ ಹೊತ್ತು ಉಳಿಯುವ ಸ್ವರ. ಸಂಧ್ಯಕ್ಷರ : ಎರಡು ಸ್ವರಗಳಿಂದ ಉಂಟಾಗುವ ಅಕ್ಷರಗಳು. ಐ, ಔ, ಏ, ಓ ಯೋಗವಾಹಗಳು ಸ್ವತಂತ್ರವಾಗಿ ಪ್ರಯೋಗಿಸಲಾಗದೆ, ಯಾವುದಾದರು ಸ್ವರದೊಂದಿಗೆ ಮಾತ್ರ ಪ್ರಯೋಗ ಮಾಡಬಹುದಾದ ಅಕ್ಷರಗಳು. ಕನ್ನಡ ವರ್ಣಮಾಲೆಯಲ್ಲಿ ನಾಲ್ಕು ಯೋಗವಾಹಗಳಿದ್ದರೂ ಎರಡು ಯೋಗವಾಹಗಳು ಮಾತ್ರ ಬಳಕೆಯಲ್ಲಿವೆ. ಅನುಸ್ವಾರ/ಬಿಂದು (ಅಂ) ಮತ್ತು ವಿಸರ್ಗ (ಅಃ) ಉಪಾಧ್ಮಾನೀಯ ‍: ೲ ಜಿಹ್ಹಾಮೂಲೀಯ : ೱ ಉದಾಹರಣೆಗೆ: ವಿವಿಧ ಸ್ವರಗಳೊಡನೆ ಅನುಸ್ವಾರ: ಅಂಜೂರ, ಆಂಧ್ರ, ಇಂಚರ, ಉಂಗುರ, ಎಂಬತ್ತು, ಒಂಟೆ, ಓಂಕಾರ ಕನ್ನಡದಲ್ಲಿ ಪದದ ನಡುವಿನಲ್ಲಿ ಬರುವ ಅನುನಾಸಿಕ ವ್ಯಂಜನಗಳ ಅರ್ಧಾಕ್ಷರ (ನ್, ಮ್ ಮುಂತಾದವು) ಬದಲು ಅನುಸ್ವರವನ್ನು ಬಳಸುವುದುಂಟು. ಉದಾ: ಅಙ್ಕ = ಅಂಕ ( ಇದನ್ನು ಅಮ್ಕ ಎಂದು ಉಲಿಯಬಾರದು ) ಅಞ್ಚೆ = ಅಂಚೆ ತಙ್ಗಿ = ತಂಗಿ ಗಣ್ಟೆ = ಗಂಟೆ ಅನ್ದ = ಅಂದ ಅಮ್ಬ = ಅಂಬ ವಿವಿಧ ಸ್ವರಗಳೊಡನೆ ವಿಸರ್ಗ: ಅಂತಃಕರಣ, ದುಃಖ ಕನ್ನಡ ಅಕ್ಷರಗಳ ಉಚ್ಚಾರಣೆ ಐಪಿಎ ನಕಾಶೆ ಕೂಡುಸ್ವರಗಳು - ಐ ಔ ಕನ್ನಡ ಅಕ್ಷರಗಳನ್ನು ಬರೆಯುವ ವಿಧಾನ ವ್ಯಂಜನಗಳು ವ್ಯಂಜನಗಳಲ್ಲಿ ಎರಡು ವಿಧ. ವರ್ಗೀಯ ವ್ಯಂಜನ ಮತ್ತು ಅವರ್ಗೀಯ ವ್ಯಂಜನ. 'ಕ' ಅಕ್ಷರದಿಂದ 'ಮ' ಅಕ್ಷರದವರೆಗೆ ವರ್ಗೀಯ ವ್ಯಂಜನಗಳು. ಇದರಲ್ಲಿ ಐದು ವರ್ಗಗಳು. ಕ ವರ್ಗ, ಚ ವರ್ಗ, ಟ ವರ್ಗ, ತ ವರ್ಗ ಮತ್ತು ಪ ವರ್ಗ. 'ಯ' ಅಕ್ಷರದಿಂದ 'ಳ' ಅಕ್ಷರದವರೆಗೆ ಅವರ್ಗೀಯ ವ್ಯಂಜನಗಳು. ಪ್ರತಿ ವ್ಯಂಜನಕ್ಕೆ ಎರಡು ಸ್ವರಗಳಿವೆ: ಅಲ್ಪಪ್ರಾಣ: ಕ (ಕ್+ಅ) ಮಹಾಪ್ರಾಣ: ಕಾ (ಕ್+ಆ') ಸಾಮಾನ್ಯ ವರ್ಣಮಾಲೆಯಲ್ಲಿ (ಅಕ್ಷರಮಾಲೆಯಲ್ಲಿ) ದೀರ್ಘ ಸ್ವರವು ಉಪಯೋಗವಾಗುತ್ತದೆ. ಕನ್ನಡದ ಗುಣಿತಾಕ್ಷರಗಳು ಕನ್ನಡ ಗುಣಿತಾಕ್ಷರಗಳ ಚಿತ್ರಸಂಚಲನೆಯನ್ನು (ಅನಿಮೇಶನ್) ವೀಕ್ಷಿಸಲು ಕೆಳಗಿನ ಬಾಕ್ಸ್‍ನಲ್ಲಿ ನೀಡಿರುವ ಕೊಂಡಿಯನ್ನು ಕ್ಲಿಕ್ ಮಾಡಿ. ಗುಣಿತಾಕ್ಷರ ಮತ್ತು ಒತ್ತಕ್ಷರ ಕನ್ನಡದಲ್ಲಿ ಪ್ರತಿಯೊಂದು ವ್ಯಂಜನಗಳಿಗೂ ಪ್ರತ್ಯೇಕ ಒತ್ತಕ್ಷರಗಳಿವೆ. ಅವುಗಳು ಹೀಗಿವೆ; ಸಂಯುಕ್ತಾಕ್ಷರಗಳಲ್ಲಿ ಎರಡು ವಿಧಗಳಿವೆ. ಕನ್ನಡ ಒತ್ತಕ್ಷರಗಳ ಚಿತ್ರಸಂಚಲನೆಯನ್ನು (ಅನಿಮೇಶನ್) ವೀಕ್ಷಿಸಲು ಕೆಳಗಿನ ಬಾಕ್ಸ್‍ನಲ್ಲಿ ನೀಡಿರುವ ಕೊಂಡಿಯನ್ನು ಕ್ಲಿಕ್ ಮಾಡಿ. ಅವರ್ಗೀಯ ವ್ಯಂಜನ ಎಂದರೇನು?ಅವು ಎಷ್ಟಿವೆ? ಒಂದು ಗುಂಪು ಅಥವಾ ಒಂದು ವರ್ಗಕ್ಕೆ ಸೇರಿಸಲು ಬಾರದ ವರ್ಣಮಾಲೆಯ ಕೊನೆಯ ಒಂಬತ್ತು ಅಕ್ಷರಗಳನ್ನು ಅವರ್ಗೀಯ ವ್ಯಂಜನಗಳೆಂದು ಕರೆಯುತ್ತಾರೆ. ಅವು ಯಾವುವೆಂದರೆ-ಯ,ರ,ಲ,ವ,ಶ,ಷ,ಸ,ಹ,ಳ. ನೋಡಿ ಕನ್ನಡ ಹೊರಸಂಪರ್ಕ ಕರ್ನಾಟಕ ಜನಾಂಗದ ಮೊತ್ತಮೊದಲ ಬರಹ ಭಾಷೆ, ಪ್ರಾಕೃತ; ಲಿಪಿ, ಬ್ರಾಹ್ಮೀ. ಇಲ್ಲಿಯ ಜನಾಂಗಕ್ಕೆ ಇವನ್ನು ಪರಿಚಯಿಸಿದವನು, ಕ್ರಿ.ಪೂ. ಮೂರನೆಯ ಶತಮಾನದಲ್ಲಿ ಪಾಟಲೀಪುತ್ರ (ಬಿಹಾರ ರಾಜ್ಯ)ದಿಂದ ಆಳುತ್ತಿದ್ದ ಮೌರ್ಯಚಕ್ರವರ್ತಿ ಅಶೋಕ. ಒಂದು ಭಾಷೆ ಮತ್ತು ಒಂದು ಲಿಪಿಯ ಮೂಲಕ ಈತನು ಬೆಸೆದ ದಖ್ಖಣವು ಸುಮಾರು ಆರು ಶತಮಾನಗಳ ಕಾಲ (ಕ್ರಿ.ಪೂ. 3ರಿಂದ ಕ್ರಿ.ಶ. 3ರವರೆಗೆ) ಈ ಮಾಧ್ಯಮಗಳ ಮೂಲಕವೇ ಸಂಭಾಷಿಸಿತು. ಉಲ್ಲೇಖಗಳು ಅಕ್ಷರಮಾಲೆಗಳು ಲಿಪಿಗಳು ಭಾರತೀಯ ಭಾಷೆಗಳು ದ್ರಾವಿಡ ಭಾಷೆಗಳು ಕನ್ನಡ ಕರ್ನಾಟಕ ವ್ಯಾಕರಣ
880
https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1%20%E0%B2%B5%E0%B2%BF%E0%B2%95%E0%B2%BF%E0%B2%AA%E0%B3%80%E0%B2%A1%E0%B2%BF%E0%B2%AF.
ಕನ್ನಡ ವಿಕಿಪೀಡಿಯ.
ಕನ್ನಡ ವಿಶ್ವಕೋಶವು ಮೀಡಿಯಾವಿಕಿಯನ್ನು ಬಳಸಿ ಕಟ್ಟಿರುವ ಸ್ವತಂತ್ರ ವಿಶ್ವಕೋಶ. ಈ ವಿಶ್ವಕೋಶ ಅನೇಕ ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ಜೂನ್ ೨೦೦೩ ರಲ್ಲಿ ಪ್ರಾರಂಭವಾಯಿತು. ಅನುವಾದಿಸಲು ಉತ್ಸಾಹವಿರುವವರು ಈ ಉಲ್ಲೇಖವನ್ನು ಓದಿಕೊಳ್ಳುವುದಾಗಿ ವಿನಂತಿ. ಪ್ರಯೋಗಾರ್ಥ ವಿಕಿಪೀಡಿಯಾ ಪುಟವನ್ನು ವಿಕಿಪೀಡಿಯಾದಲ್ಲಿ ಸಂಪಾದನೆ ಕಲಿಯಲು ಬಳಸಿಕೊಳ್ಳಬಹುದು. ಪೀಠಿಕೆ ಆಧುನಿಕ ಬದುಕಿನ ಜ್ಞಾನ-ವಿಜ್ಞಾನ ಕ್ಷೇತ್ರದಲ್ಲಿನ ಅದ್ಭುತ ಅವಿಷ್ಕಾರಗಳಲ್ಲೊಂದಾದ ಮಾಹಿತಿ ತಂತ್ರಜ್ಞಾನದ ಒಂದು ವಿನೂತನ ಪರಿಕಲ್ಪನೆ -ವಿಕಿಪೀಡಿಯಾ. ಹವಾಮಿ ಭಾಷೆಯಲ್ಲಿ ವಿಕಿ(wiki) ಎಂದರೆ ಶೀಘ್ರ ಅಥವಾ ತ್ವರಿತಗತಿ ಎಂದರ್ಥ. ಇಂಗ್ಲೀಷಿನಲ್ಲಿ ಎನ್ ಸೈಕ್ಲೊಪೀಡಿಯಾ (Encyclopedia) ಎಂದರೆ ವಿಶ್ವಕೋಶ ಎಂದರ್ಥ. ಇವೆರಡೂ ಶಬ್ದಗಳನ್ನು ಸಂಯೋಜಿಸಿ ವಿಕಿಪೀಡಿಯಾ (wikipedia) ಎಂಬ ಗಣಕೀಕೃತ ವಿಶ್ವಕೋಶದ ಮಾದರಿಯಲ್ಲಿ ಇದನ್ನು ಅಭಿವೃದ್ಧಿಗೊಳಿಸಲಾಗಿದೆ. ಕನ್ನಡದಲ್ಲಿ ಇದನ್ನು 'ತ್ವರಿತ ವಿಶ್ವಕೋಶ' ಎಂದು ಹೆಸರಿಸ ಬಹುದು. ಇದೊಂದು ಬಹುಭಾಷೀಯ ಹಾಗೂ ಅಂತರಜಾಲ ಆಧಾರಿತ ವಿಶ್ವಕೋಶವಾಗಿದ್ದು,ನಿರಂತರವಾಗಿ ಪರಿಷ್ಕರಣಗೂಳ್ಳಬಲ್ಲ ಮಾಹಿತಿ ವಿತರಣ ಸಾಧನವಾಗಿದೆ. ಕ್ರಿ.ಶ್ ೨೦೦೧ರಲ್ಲಿ ಆಯೋಜಿಸಲ್ಪಟ್ಟ ಈ ವಿಶ್ವಕೋಶವು ಅತ್ಯಂತ ಶೀಘ್ರವಾಗಿ ಬೆಳವಣಿಗೆಯನ್ನು ಹೊಂದಿ ಇಂದು ಅತ್ಯಂತ ಬೃಹತ್ತಾದ ಮತ್ತು ಅಸಂಖ್ಯಾತ ಆಕರಗಳನ್ನು ಹೊಂದಿರುವ ಅಂತರಜಾಲ ತಾಣವಾಗಿ ಅಭಿವೃದ್ಧಿಗೊಂಡಿದೆ. ಈ ತಾಣವನ್ನು ವಿಶ್ವದಾದ್ಯಂತ ಪ್ರತಿ ತಿಂಗಳು ಸುಮಾರು ೪೦೦ ದಶಲಕ್ಷ ಮಂದಿ ಸಂದರ್ಶಿಸುತ್ತಾರೆಂದು ಹೇಳಲಾಗಿದೆ. ಅನೇಕ ವೈವಿಧ್ಯಮಯ ಕ್ಷೇತ್ರಗಳಲ್ಲಿನ ಸುಮಾರು ೮೨೦೦೦ ಮಂದಿ ೧೭ ದಶಲಕ್ಷ ಲೇಖನಗಳನ್ನು ಈ ತಾಣಕ್ಕೆ ಕಳುಹಿಸುತ್ತಾರೆ. ಯಾವುದೇ ರೀತಿಯ ಸಾಮಾಜಿಕ, ಸಾಂಸ್ಕೃತಿಕ, ಅಥವಾ ಜನಾಂಗೀಯ ನಿರ್ಬಂಧಗಳಿಲ್ಲದೆ ಯಾರು ಬೇಕಾದರೂ ವಿವಿಧ ರೀತಿಯ ಲೇಖನಗಳು, ಆಕರಗಳು, ಚಿತ್ರಗಳು ಮತ್ತಿತರ ಮಾಧ್ಯಮ ಪ್ರಕಾರಗಳ ಬಗೆಗಿನ ಮಾಹಿತಿಗಳನ್ನು ಈ ತಾಣಕ್ಕೆ ಕಳುಹಿಸಬಹುದು. ಮುಕ್ತ ಬಳಕೆಗೆ ಅವಕಾಶ ಕೊಡುಗೆದಾರರ ಪರಿಣತಿಯಾಗಲೀ ವಿದ್ಯಾರ್ಹತೆಯಾಗಲೀ ಅಥವಾ ಮತ್ತಾವುದೇ ಅಂಶವಾಗಲೀ ಇಲ್ಲಿ ಗಣನೆಗೆ ಬರುವುದಿಲ್ಲ. ಆದರೆ ಹಾಗೆ ನೀಡಲ್ಪಟ್ಟ ಮಾಹಿತಿಗಳು ನಂಬಲರ್ಹವಾದ ಮೂಲಗಳ ಮೂಲಕ ಖಚಿತಗೊಳ್ಳಲ್ಪಡಲು ಸಮರ್ಥವಾಗಿರಬೇಕು. ಅಂತರಜಾಲ ಸಂಪರ್ಕವನ್ನು ಹೊಂದಿರುವ ಯಾರೇ ಆದರೂ ಇಲ್ಲಿ ಲಭ್ಯವಿರುವ ಮಾಹಿತಿಗಳನ್ನು ಪರಿಷ್ಕರಿಸಬಹುದು ಅಥವಾ ವೃದ್ಧಿಗೊಳಿಸಬಹುದು. ಈ ರೀತಿಯ ಬಹಿರಂಗ ವ್ಯವಸ್ಥೆಯ ಕಾರಣದಿಂದಾಗಿ ಈ ತಾಣದಲ್ಲಿ ಬೃಹತ್ ಪ್ರಮಾಣದ ಮಾಹಿತಿಗಳು ಲಭ್ಯವಾಗಲು ಸಾಧ್ಯವಾಗಿದೆ. ವಿಕಿಪೀಡಿಯಾ ತಾಣವನ್ನು ಸಂದರ್ಶಿಸುವ ಮಂದಿಯಲ್ಲಿ ಅನೇಕರು ತಮಗೆ ಆಸಕ್ತಿ ಇರುವ ಮಾಹಿತಿಗಳನ್ನು ಪಡೆದುಕೂಳ್ಳಲು ಬಯಸಿದರೆ ಮತ್ತೆ ಕೆಲವರು ತಮ್ಮಲ್ಲಿಯ ಮಾಹಿತಿಗಳನ್ನು ಇತರರೊಂದಿಗೆ ವಿನಿಮಯ ಮಾಡಿಕೂಳ್ಳಲು ಉತ್ಸುಕರಾಗಿರುತ್ತಾರೆ. ಈ ತಾಣದಲ್ಲಿ ಲಭ್ಯವಿರುವ ಮಾಹಿತಿಗಳನ್ನು ನಿರಂತರವಾಗಿ ಸುಧಾರಣೆಗೆ ಮತ್ತು ಪರಿಷ್ಕರಣೆಗೆ ಒಳಪಡಿಸಲಾಗುತ್ತದೆ . ಮಾಹಿತಿಗಳನ್ನು ಹಲವಾರು ಶೀರ್ಷಿಕೆಗಳಿಗೆ ಅನುಗುಣವಾಗಿ ವರ್ಗೀಕರಿಸಲಾಗುತ್ತದೆ. ಈ ವಿಕಿಪೀಡಿಯ ತಾಣವು ಹಲವಾರು ಪ್ರವೇಶದ್ವಾರ (Portal)ಗಳನ್ನು ಹೊಂದಿದೆ. ಈ ದ್ವಾರಗಳ ಸುತ್ತ ಒಂದು ನಿರ್ದಿಷ್ಟ ವಿಷಯದ ಬಗೆಗಿನ ಪಠ್ಯಗಳನ್ನು ಅಳವಡಿಸಲಾಗಿರುತ್ತದೆ. ಗಣಕಯಂತ್ರದ ಪರದೆಯ ಬಲ ಮೇಲುಭಾಗದಲ್ಲಿನ ಶೋಧ ಸಂಪುಟ (Search Box)ವನ್ನು ಬಳಸಿ ನಮೆಗೆ ಬೇಕಾದ ಲೇಖನಗಳು ಅಥವಾ ಮಾಹಿತಿಯನ್ನು ಪಡೆಯಬಹುದು. ವಿಕಿಪೀಡಿಯಾ ಸುಮಾರು ಇನ್ನೂರು ಭಾಷಾವಿಭಾಗಗಳಲ್ಲಿ ಲಭ್ಯವಿದೆ. ಸರಳ ಇಂಗ್ಲೀಷ ಅವತರಣೆಕೆಗಳಲ್ಲದೆ. ಶಬ್ದಕೋಶ (Dictionary) ನುಡಿಮುತ್ತುಗಳು (Quotations), ಗ್ರಂಥಗಳು (Books), ಕೈಪಿಡಿಗಳು (Manuals) ವೈಜ್ಞಾನಿಕ ಆಕರಗಳು (Scientific References) ಹಾಗೂ ಮಾಧ್ಯಮ ಸೇವೆಗಳು (News Services) ಹಾಗೂ ಇತರ ಸಂಬಂಧಿತ ಮಾಹಿತಿಗಳನ್ನು ಇಲ್ಲಿ ಪಡೆಯಬಹುದು. ಈ ಎಲ್ಲ ಮಾಹಿತಿ ಪ್ರಾಕಾರಗಳನ್ನು ಪ್ರತ್ಯೇಕ ತಜ್ಞ ಸಮುದಾಯಗಳು ನಿರ್ವಹಿಸಿ ಸುಧಾರಿಸುತ್ತಿರುತ್ತವೆ. ಇತರ ಮೂಲಗಳಿಂದ ಪಡೆಯಲು ದುರ್ಲಭವಾಗಿರುವಂತಹ ಅನೇಕ ಮಾಹಿತಿಪ್ರಾಕಾರಗಳು ಮತ್ತು ಲೇಖನಗಳನ್ನು ಇಲ್ಲಿ ಕಾಣಲು ಸಾಧ್ಯವಿದೆ. ವಿಕಿಪೀಡಿಯಾದಲ್ಲಿನ ಲೇಖನಗಳು ಮತ್ತು ಮಾಹಿತಿಗಳು ಒಂದಕ್ಕೊಂದು ಬೆಸುಗೆಗೊಂಡಿದ್ದು ಅವು ಪಾರಸ್ಪರಿಕ- ಆಕರಗಳನ್ನು ಹೊಂದಿರುತ್ತವೆ. ಗಣಕಯಂತ್ರದ ಮೂಷಿಕವನ್ನು ಯಾವುದಾದರೂ ಬೆಸುಗೆ (Link)ಯ ಮೇಲೆ ಇರಿಸಿದಾಗ ಆ ಬೆಸುಗೆಯು ಯಾವ ಲೇಖನದ ಬಗ್ಗೆ ಮಾಹಿತಿಗಳನ್ನು ನೀಡಬಲ್ಲದೆಂದು ಸೂಚಿಸುತ್ತದೆ. ಪ್ರತಿಯೊಂದು ಲೇಖನದ ಅಂತ್ಯದಲ್ಲಿಯೂ ಹಲವಾರು ಪ್ರತ್ಯೇಕ ಬೆಸುಗೆಗಳಿದ್ದು ಅವು ಇತರ ಕುತೂಹಲಕಾರಿ ಲೇಖನಗಳು ಅಥವಾ ಪ್ರಸ್ತುತ ಬಾಹ್ಯ ಜಾಲತಾಣಗಳು (Relevant External Websites) ಮತ್ತು ಪುಟಗಳು, ಆಕರ ವಿಷಯಗಳು ಆಥವಾ ನಿರ್ದಿಷ್ಟ ಜ್ಞಾನಕ್ಷೇತ್ರದ ವ್ಯವಸ್ಥಿತ ವಿಭಾಗಗಳ ಬಗ್ಗೆ ಮಾಹಿತಿಯನ್ನು ನೀಡಬಲ್ಲವು. ಇತರ ಕೆಲವು ಲೇಖನಗಳು, ಶಬ್ದಕೋಶದಲ್ಲಿನ ಖಚಿತ ವಿವರಣೆಗಳು, ಶ್ರಾವ್ಯ ಗ್ರಂಥಗಳ ಆಲಿಕೆ ಮತ್ತು ವಾಚನ, ಉದ್ಧೃತ ವಾಕ್ಯಗಳು ಇತರ ಭಾಷೆಗಳಲ್ಲಿರಬಹುದಾದ ಅದೇ ಲೇಖನ ಅಥವಾ ವಿಕಿಪೀಡಿಯಾದ ಸಹ-ಪ್ರಕಟನೆಗಳಲ್ಲಿ ದೂರೆಯಬಹುದಾದ ಇನ್ನಷ್ಟು ವಿವರಗಳು, ಇವೇ ಮುಂತಾದುವುಗಳ ಬಗ್ಗೆ ಮಾಹಿತಿಯನ್ನು ನೀಡಬಲ್ಲವು. ಯಾವುದಾದರೂ ಕೆಲವು ನಿರ್ದಿಷ್ಟ ಬೆಸುಗೆಗಳು ಅಲಭ್ಯವಾಗಿದ್ದಲ್ಲಿ ಅವುಗಳನ್ನು ಸೇರಿಸಲೂ ಸಹ ಅವಕಾಶವಿದೆ. ಇದು ಆಸಕ್ತರು ವಿಕಿಪೀಡಿಯಾಗೆ ನೀಡಬಹುದಾದ ಮತ್ತೊಂದು ಕೊಡುಗೆ. ಬದಲಾವಣೆ ಅನಿವಾರ್ಯ ವಿಕಿಪೀಡಿಯಾದಲ್ಲಿನ ದಾಖಲೆಗಳು ಮತ್ತು ಮಾಹಿತಿಗಳನ್ನು ಅವು ಸ್ವಯಂ ಪರಿಪೂರ್ಣವೆಂದು ಭಾವಿಸಬಾರದು. ವಿಶ್ವದಲ್ಲಿ ಮಾಹಿತಿ ತಂತ್ರಜ್ಞಾನ, ವಿಜ್ಞಾನ, ಮತ್ತು ಅನ್ವೇಷಣೆಗಳು ನಿರಂತರವಾಗಿ ಜರುಗುತ್ತಿರುವುದರಿಂದ, ಹೀಗೆ ದೊರೆತ ತಧ್ಯಗಳನ್ನು ನಿರಂತರವಾಗಿ ಪರಿಷ್ಕರಣೆ ಹಾಗೂ ಸುಧಾರಣೆಗೆ ಒಳಪಡಿಸಲಾಗುತ್ತಿರುತ್ತದೆ. ಇದರಿಂದ ಕ್ರಮೇಣ ಅವುಗಳ ದರ್ಜೆ, ಕೆಲವುಸಮಯದಲ್ಲಿ ಹಳೆಯದನ್ನು ಒತ್ತಟ್ಟಿಗಿಟ್ಟು ಹೊಸದನ್ನು ಪ್ರತಿಪಾದಿಸುವ ಒಂದು ದೃಷ್ಟಿಕೋನ ಮತ್ತೆ ಗುಣಮಟ್ಟಗಳ ಮೌಲ್ಯವರ್ಧನೆಗೆ ಸಹಾಯವಾಗುತ್ತದೆ. ಇಲ್ಲಿನ ಎಲ್ಲ ಮಾಹಿತಿಗಳೂ ಪ್ರಾರಂಭದಲ್ಲಿಯೇ ವಿಶ್ವಕೋಶೀಯ ದರ್ಜೆಯವೆಂದು ಬಳಕೆದಾರರು ಭಾವಿಸಬಾರದು. ಇಲ್ಲಿ ದೊರೆಯುವ ಹಲವಾರು ಮಾಹಿತಿಗಳು ಸತ್ಯದೂರ ಅಥವಾ ಚರ್ಚಾಸ್ಪದ ವಿಷಯಗಳಾಗಿರುವ ಸಾಧ್ಯತೆಗಳಿವೆ. ವಾಸ್ತವವಾಗಿ ಅನೇಕ ಮಾಹಿತಿಗಳು ಕೇವಲ ಒಂದು ದೃಷ್ಟಿಕೋನವನ್ನು ಮಾತ್ರ ಪ್ರತಿನಿಧಿಸಬಹುದು. ವಾದ ವಿವಾದಗಳು ಮತ್ತು ಚರ್ಚೆಗಳಿಂದ ಕೂಡಿದ ಸುದೀರ್ಘ ವೈಚಾರಿಕ ಪ್ರಕ್ರಿಯೆಯ ನಂತರವೇ ಒಂದು ಒಮ್ಮತದ ಮತ್ತು ಅಲಿಪ್ತ ದೃಷ್ಟಿಕೋನವನ್ನು ನಿರ್ಧರಿಸಲಾಗುವುದು. ಅಲ್ಲದೆ ತಜ್ಞ ಪರಿಷ್ಕರಣಕಾರರು ಯಾವುದೇ ಒಂದು ಲೇಖನದ ವಿಷಯ ಅಥವಾ ವಿಧಾನಗಳ ಬಗ್ಗೆ ಅಭಿಪ್ರಾಯ ಭೇದವನ್ನು ತೋರಿದರೆ ಅಂತಹ ಸಂದರ್ಭಗಳಲ್ಲಿ ಅವರು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಅವರಿಗೆ ನೆರವಾಗಲು ವಿಕಿಪೀಡಿಯಾ ಹಲವಾರು ಆಂತರಿಕ ವಿವಾದ ನಿವಾರಣಾ ಪ್ರಕ್ರಿಯೆಗಳನ್ನು ವ್ಯವಸ್ಥೆಗೂಳಿಸಿದೆ. ಸಮಯೋಜಿತ ಬಳಕೆ ಅನಿವಾರ್ಯ ವಿಕಿಪೀಡಿಯಾದಲ್ಲಿನ ಲೇಖನಗಳು ಕೆಲವು ಆದರ್ಶ ಲಕ್ಷಣಗಳನ್ನು ಹೊಂದಿರುತ್ತವೆ. ಅವು ಉತ್ತಮ ಶಬ್ದ ಸಂಪತ್ತಿನಿಂದ ಕೂಡಿದ್ದು ಸಮತೋಲಿತ, ತಟಸ್ಥ ಹಾಗೂ ವಿಶ್ವಕೋಶೀಯ ದರ್ಜೆಯ ಮಾಹಿತಿಗಳನ್ನು ಹೊಂದಿರುತ್ತವಲ್ಲದೆ ಅವು ವ್ಯಾಪಕ ಹಾಗೂ ಪುರಾವೆಗಳನ್ನು ಒದಗಿಸಲು ಸಮರ್ಥವಾದ ದಾಖಲೆಗಳಾಗಿರುತ್ತವೆ. ವಿಕಿಪೀಡಿಯಾದಲ್ಲಿ ಕಂಡು ಬರುವ ಮಾಹಿತಿಗಳನ್ನು ಸಂಶೋಧನ ಆಕರಗಳನ್ನಾಗಿ ಬಳಸಬೇಕಾದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕಾದುದು ಅವಶ್ಯಕ ಏಕೆಂದರೆ ಇಲ್ಲಿನ ಹಲವಾರು ಲೇಖನಗಳು ಸ್ವಾಭಾವಿಕವಾಗಿ ತಮ್ಮ ಪ್ರಬುದ್ಧತೆ ಮತ್ತು ಬೌದ್ಧಿಕ ದರ್ಜೆಗಳಲ್ಲಿ ಗಣನೀಯ ಪ್ರಮಾಣದ ಏರುಪೇರುಗಳನ್ನು ತೋರಿಸಬಹುದು. ಸಂಶೋಧಕರು ಈ ಬಗ್ಗೆ ಜಾಗೃತರಾಗುವಂತೆ ನೆರವಾಗಲು ಹಲವಾರು ಮಾರ್ಗಸೂಚಿಗಳು ಮತ್ತು ಸೂಚನಾಪುಟಗಳನ್ನು ವ್ಯವಸ್ಥೆಗೂಳಿಸಲಾಗಿದೆ. ಸಾಂಪ್ರದಾಯಿಕವಾದ ಮುದ್ರಿತ ವಿಶ್ವಕೋಶಗಳಿಗಿಂತ ವಿಕಿಪೀಡಿಯಾ ಕೆಲವು ಹೆಚ್ಚಿನ ಸೌಲಭ್ಯಗಳನ್ನು ಹೂಂದಿದೆ. ವಿಕಿಪೀಡಿಯಾದಲ್ಲಿನ ಮಾಹಿತಿ ಸಂಗ್ರಹಣೆ ತುಂಬಾ ಅಗ್ಗ. ಈ ಮಾಹಿತಿಗಳನ್ನು ಮುದ್ರಿಸಬೇಕಾದ ಅಗತ್ಯವಿಲ್ಲದೆ ಇರುವುದರಿಂದ ಪರಿಸರ ಹಾನಿ ಗಣನೀಯವಾಗಿ ತಗ್ಗುವುದು . ವಿಕಿಪೀಡಿಯಾದ ಪ್ರತಿಯೊಂದು ಮಾಹಿತಿಯೂ ಬೆಸುಗೆಗಳನ್ನು (Links) ಹೊಂದಿರುವುದರಿಂದ ಮುದ್ರಿತ ಗ್ರಂಥಗಳಲ್ಲಿರುವಂತೆ ಸಾಲು ಸಾಲಿಗೂ ಸೂಕ್ತ ವಿವರಣೆಗಳನ್ನು ನೀಡಬೇಕಾದ ಅವಶ್ಯಕತೆ ಇರುವುದಿಲ್ಲ. ಅಲ್ಲದೆ ವಿಕಿಪೀಡಿಯಾದ ಸಂಪಾದಕೀಯ ಚಕ್ರ ಅಲ್ಪಪ್ರಮಾಣದ್ದು. ಮುದ್ರಿತ ವಿಶ್ವಕೋಶಗಳು ಮುಂದಿನ ಪರಿಷ್ಕೃತ ಆವೃತ್ತಿ ಪ್ರಕಟಗೊಳ್ಳುವವರೆಗೂ ಬದಲಾವಣೆ ಹೊಂದದೆ ಇರಬೇಕಾಗುತ್ತದೆ. ಅಲ್ಲದೆ ಬಳಕೆದಾರರು ಪ್ರತಿ ಪರಿಷ್ಕೃತ ಆವೃತ್ತಿಗೂ ಹೆಚ್ಚಿನ ಹಣವನ್ನು ವೆಚ್ಚಮಾಡಬೇಕಾಗುತ್ತದೆ. ಆದರೆ ವಿಕಿಪೀಡಿಯಾದಲ್ಲಿ ಪರಿಷ್ಕರಣಕಾರರು ಯಾವುದೇ ಕ್ಷಣದಲ್ಲಿ ಮಾಹಿತಿಗಳನ್ನು ಪರಿಷ್ಕರಿಸಿ ಅವುಗಳ ಉತ್ಕೃ಼ಷ್ಟತೆಯನ್ನು ಹೆಚ್ಚಿಸಬಹುದು. ಇದರಿಂದಾಗಿ ಇತ್ತೀಚಿನ ವಿದ್ಯಮಾನಗಳು ಮತ್ತು ವಿದ್ವತ್ ಪ್ರಗತಿಗಳನ್ನು ಸಹ ತಕ್ಷಣವೇ ದಾಖಲಿಸಿ ಮಾಹಿತಿಗಳು ಪ್ರಸ್ತುತತೆಯನ್ನು ವೃದ್ಧಿಗೊಳಿಸಬಹುದು. ವಿಕಿಪೀಡಿಯಾ ಎಂಬ ಬೌದ್ಧಿಕ ಆಯಾಮದಲ್ಲಿ ಪಾತ್ರ ವಹಿಸಲು ಎಲ್ಲರಿಗೂ ಮುಕ್ತ ಅವಕಾಶವುಂಟು. ಅದರಲ್ಲಿನ ಮಾಹಿತಿ ಸಂಗ್ರಹಕಾರರ ವ್ಯಾಪ್ತಿ ತುಂಬಾ ವಿಸ್ತಾರವಾದುದು. ಅಲ್ಲದೆ, ವಿಕಿಪೀಡಿಯಾದ ಸಂಪಾದಕೀಯ ಮಾರ್ಗಸೂಚಿ ಹಾಗೂ ಧೋರಣೆಗಳಿಗೆ ಒಳಪಟ್ಟು ಮತ್ತು ಬಹುಮತದ ಒಪ್ಪಿಗೆಯಿಂದ ಅಲ್ಲಿನ ಲೇಖನಗಳು ಬರೆಯಲ್ಪಡುತ್ತವೆ. ಇದು ವಿಕಿಪೀಡಿಯಾದ ಅಗಾಧ ಸಾಮರ್ಥ್ಯವೂ ಹೌದು ಮತ್ತು ಕೆಲವೊಮ್ಮೆ ಇದರ ದೌರ್ಬಲ್ಯ ಮತ್ತು ವೈವಿಧ್ಯತೆಗಳೂ ಹೌದು. ಮಾಹಿತಿಗಳನ್ನು ಜವಾಬ್ದಾರಿಯುತವಾಗಿ ಬದಲಾಯಿಸಬೇಕು ವಿಕಿಪೀಡಿಯಾದಲ್ಲಿನ ಮಾಹಿತಿಗಳನ್ನು ಯಾರು ಬೇಕಾದರೂ ಪರಿಷ್ಕರಿಸಲು ಸಾಧ್ಯವಿರುವುದರಿಂದ ಅವು ಬೌದ್ಧಿಕ ರೂಕ್ಷತೆಗೆ ಗುರಿಯಾಗುವ ಸಂಭವವುಂಟು. ಇಂತಹ ಅನಪೇಕ್ಷಿತ ಮಾಹಿತಿಗಳು ಸೇರ್ಪಡೆಯಾಗುವ ಸಾಧ್ಯತೆಗಳೂ ಉಂಟು. ಇಂತಹ ಅನಪೇಕ್ಷಿತ ಮಾಹಿತಿಗಳನ್ನು ವಿಸರ್ಜಿಸಬೇಕಾದ ಅಗತ್ಯತೆಗಳೂ ಉಂಟಾಗುತ್ತವೆ. ಸಾಂಪ್ರದಾಯಿಕ ಆಕರಗಳಲ್ಲಿ ಪೂರ್ವಾಗ್ರಹದಿಂದ ಕೂಡಿದ ಅಥವಾ ಏಕಪಕ್ಷೀಯವಾದ ಮಾಹಿತಿಗಳ ಬಗ್ಗೆ ಆಕ್ಷೇಪಗಳನ್ನೆತ್ತುವುದು ಸುಲಭವಲ್ಲ. ಆದರೆ ವಿಕಿಪೀಡಿಯಾದಲ್ಲಿ ಇಂತಹ ಆಕ್ಷೇಪಣೆಗಳನ್ನು ಕೂಡಲೇ ಪ್ರಸ್ತಾಪಿಸಿ ಮಾಹಿತಿ ಸಂಗ್ರಹಕಾರರಿಗೆ ತಕರಾರುಗಳನ್ನು ನೀಡಬಹುದು. ಅನೇಕ ಮಾಹಿತಿದಾರರು ವಿಕಿಪೀಡಿಯಾದ ಸಂಪಾದಕೀಯ ಧೋರಣೆಗಳನ್ನು ಸಂಪೂರ್ಣವಾಗಿ ಪರಿಪಾಲಿಸದೆ ಇರಬಹುದು ಅಥವಾ ಉಲ್ಲೇಖಾರ್ಹ ಮೂಲಗಳಿಲ್ಲದೆ ಮಾಹಿತಿಗಳನ್ನು ಒದಗಿಸಬಹುದು. ವಿಕಿಪೀಡಿಯಾದ ಬಿಚ್ಚು ಧೋರಣೆಯಿಂದಾಗಿ ಯಾವುದೇ ಸತ್ಯಬಾಹಿರವಾದ ಅಥವಾ ತಪ್ಪುದಾರಿಗೆಳೆಯುವ ಮಾಹಿತಿಗಳನ್ನು ತಕ್ಷಣವೇ ಸರಿಪಡಿಸುವ ಸಾಧ್ಯತೆಗಳು ಅಧಿಕಗೊಂಡಿವೆ. ವಿಕಿಪೀಡಿಯಾಗೆ ಮಾಹಿತಿಗಳನ್ನು ನೀಡುವ ವ್ಯಕ್ತಿಗಳು ಸೌಜನ್ಯಶೀಲರೂ, ತಟಸ್ಥರೂ ಆಗಿರಬೇಕೆಂಬುದನ್ನು ನಿರೀಕ್ಷಿಸಲಾಗುತ್ತದೆ. ಅವರು ಮಾಹಿತಿಗಳನ್ನು ಕಳುಹಿಸಿವ ಮುನ್ನ ವಿಕಿಪೀಡಿಯಾದ ಸ್ವಾಗತ ಪುಟಗಳನ್ನು ಮತ್ತು ಇತರ ಸಹಾಯಕ ಉಪಕರಣಗಳನ್ನೂ ನೋಡಿ ಮನದಟ್ಟುಮಾಡಿಕೊಳ್ಳುವುದು ಒಳ್ಳೆಯದು. ವಿಕಿಪೀಡಿಯಾ ಸಮುದಾಯವು ಬಹುಪಾಲು ಒಂದು ಸ್ವ-ವ್ಯವಸ್ಥೆಗೂಂಡ ಸಂಘಟನೆ. ಈ ಕಾರಣದಿಂದ ಯಾವುದೇ ವ್ಯಕ್ತಿಯಾದರೂ ಒಬ್ಬ ಸಮರ್ಥ ಪರಿಷ್ಕರಣಕಾರನೆಂಬ ಹೆಗ್ಗಳಿಕೆಯನ್ನು ಗಳಿಸಿಕೊಳ್ಳುವುದು ಸಾಧ್ಯವಾಗಿದೆ. ಯಾವುದೇ ವ್ಯಕ್ತಿಯು ತಾನು ಬಯಸಿದ ಯಾವುದೇ ಪಾತ್ರದಲ್ಲಿ ತೂಡಗಿಸಿಕೊಳ್ಳಲು ಸಾಧ್ಯ. ಬಹುತೇಕ ವ್ಯಕ್ತಿಗಳು ಕೆಲವು ಪರಿಣತ ಕೆಲಸಗಳಲ್ಲಿ ಪ್ರವೃತ್ತರಾಗಲು ಬಯಸುತ್ತಾರೆ. ಇತರರ ಪ್ರಾರ್ಥನೆಯ ಮೇರೆಗೆ ಲೇಖನಗಳ ವಿಮರ್ಶೆ, ಬೌದ್ಧಿಕ ರೂಕ್ಷತೆಗಾಗಿ ಪ್ರಸ್ತುತ ಲೇಖನಗಳ ಮೇಲೆ ಕಣ್ಣಿಡುವುದು. ಗುಣನಿಯಂತ್ರಣದ ಉದ್ದೇಶಕ್ಕಾಗಿ ನೂತನವಾಗಿ ಸೇರ್ಪಡೆಗೊಂಡ ಲೇಖನಗಳ ಬಗ್ಗೆ ಜಾಗರೂಕರಾಗಿರುವುದು ಮತ್ತಿತರ ಅಂತಹ ಕಾರ್ಯಗಳಲ್ಲಿ ಅವರು ಪ್ರವೃತ್ತರಾಗ ಬಯಸುತ್ತಾರೆ. ದುರ್ಬಳಕೆ ಹಾಗೂ ವಿವಾದರಹಿತವಾಗಿರಲಿ ಆಗಾಗ್ಗೆ ತಲೆದೋರಬಹುದಾದ ದುರ್ಬಳಿಕೆ ಅಥವಾ ವಿವಾದಗಳನ್ನು ಪರಿಹರಿಸಲು ವಿಕಿಪೀಡಿಯಾ ಸಮೃದ್ಧವಾದ ವಿಧಾನಗಳನ್ನು ಹೂಂದಿದೆ. ಈ ವಿದಾನಗಳನ್ನು ತೀವ್ರ ಪರೀಕ್ಷೆಗಳಿಗೆ ಒಳಪಡಿಸಲಾಗಿದ್ದು ಅವುಗಳ ವಿಶ್ವಾಸಾರ್ಹತೆ ಅತಿ ಉನ್ನತ ಮಟ್ಟದ್ದಾಗಿದೆ. ಜ್ಞಾನ ಭಂಡಾರ ವೃದ್ಧಿಸಲಿ ಕ್ರಿ.ಶ. ೨೦೦೧ರಲ್ಲಿ ಪ್ರಾರಂಭವಾದ ಇಂಗ್ಲೀಷ ವಿಕಿಪೀಡಿಯಾದಲ್ಲಿ ಇಂದು ಸುಮಾರು ೪೬ ಲಕ್ಷ ಲೇಖನಗಳು ಲಭ್ಯವಿದೆ. ಇಂಗ್ಲೀಷ್ ವಿಕಿಪೀಡಿಯಾ ಅಲ್ಲದೆ ಜಗತ್ತಿನ ಸುಮಾರು ೨೮೬ ಭಾಷೆಗಳಲ್ಲಿ ವಿಕಿಪೀಡಿಯಾ ಲಭ್ಯವಿದೆ. ಪ್ರತಿನಿತ್ಯ ಜಗತ್ತಿನ ವಿವಿಧ ಭಾಗಗಳಿಂದ ನೂರಾರು ಸಾವಿರ ಮಂದಿ ಹತ್ತಾರು ಸಾವಿರ ಮಾಹಿತಿಗಳನ್ನು ಒದಗಿಸುತ್ತಾರಲ್ಲದೆ ಸಾವಿರಾರು ಲೇಖನಗಳನ್ನು ಸಿದ್ಧಪಡಿಸಿ ವಿಕಿಪೀಡಿಯಾದ ಜ್ಞಾನ ಭಂಡಾರವನ್ನು ಮತ್ತಷ್ಟು ಸಮೃದ್ಧಗೂಳಿಸಲು ನೆರವಾಗುತ್ತಲಿದ್ದಾರೆ. ಕನ್ನಡ ವಿಕಿಪೀಡಿಯ ಅಂಕಿ ಅಂಶಗಳು ಸಂಪಾದನೋತ್ಸವಗಳು ಕನ್ನಡ ವಿಕಿಪೀಡಿಯದಲ್ಲಿ ಲೇಖನಗಳನ್ನು ಹೆಚ್ಚಿಸಲು ಅಲ್ಲಲ್ಲಿ ಆಗಾಗ ಸಂಪಾದನೋತ್ಸವಗಳನ್ನು (edit-a-thon) ಆಚರಿಸಲಾಗುತ್ತದೆ. ಅವುಗಳ ಬಗೆಗಿನ ವಿವರಣಾತ್ಮಕ ಪುಟಗಳನ್ನು ಇಲ್ಲಿವೆ. ವಿಕಿಪೀಡಿಯ:ಸಂಪಾದನೋತ್ಸವಗಳು ಉಲ್ಲೇಖಗಳು ಅಂತರ್ಜಾಲದಲ್ಲಿ ನೆಟ್ಟ ಸಸಿಗೆ ಈಗ ಹತ್ತು ವರ್ಷ | - Kannadaprabha.com 10 years on, Kannada Wikipedia lags - The Hindu The struggles of keeping Kannada Wikipedia afloat - The Hindu ವಿಕಿಪೀಡಿಯ ಪುಟಗಳು
885
https://kn.wikipedia.org/wiki/%E0%B2%AF%E0%B3%81%E0%B2%A8%E0%B2%BF%E0%B2%95%E0%B3%8B%E0%B2%A1%E0%B3%8D
ಯುನಿಕೋಡ್
ಗಣಕೀಕರಣದಲ್ಲಿ ಯುನಿಕೋಡ್ ಎಂದರೆ ಒಂದು ಅಂತರರಾಷ್ಟ್ರೀಯ ನಿರ್ದಿಷ್ಟಮಾನ. ಇದರ ಧ್ಯೇಯ - ಎಲ್ಲಾ ಮಾನವ ಭಾಷೆಗಳಲ್ಲಿ ಬೇಕಾಗುವ ಪ್ರತಿಯೊಂದು ಅಕ್ಷರಕ್ಕೂ ಆಕರದಲ್ಲಿ ಒಂದು ಅಪೂರ್ವ (Unique) ಇಂಟಿಜರ್ ಸಂಖ್ಯೆಯನ್ನು ಕೊಡುವುದು. ಈ ಕೋಡ್ ಸಂಖ್ಯೆಯನ್ನು ಕೋಡ್ ಪಾಯಿಂಟ್ ಎನ್ನುತ್ತಾರೆ. ಕೆಲವು ಟೀಕೆ, ಸಂಧಿಗ್ಧತೆ ಹಾಗೂ ತಾಂತ್ರಿಕ ತೊಂದರೆಗಳಿದ್ದರೂ ಸಹ ತಂತ್ರಾಂಶಗಳ ಅಂತರರಾಷ್ಟ್ರೀಯತೆಯಲ್ಲಿ (internationalization) ಪ್ರಬಲ ಎನ್ಕೋಡಿಂಗ್ ವಿಧಾನವಾಗಿ ಹೊರಹೊಮ್ಮಿದೆ. ಯುನಿಕ್ಸ್ ಮತ್ತು ಸಮಾನವಾದ ಗ್ನು/ಲಿನಕ್ಸ್, ಬಿ ಎಸ್ ಡಿ, ಹಾಗೂ ಮ್ಯಾಕ್ ಓಎಸ್ ಎಕ್ಸ್ ಇವೇ ಮೊದಲಾದ ಆಪರೇಟಿಂಗ್ ಸಿಸ್ಟಮ್ ಗಳು ಯುನಿಕೋಡನ್ನು (ಯು ಟಿ ಎಫ್ -೮ ರ ರೂಪದಲ್ಲಿ) ಅಂಗೀಕರಿಸಿವೆ. ಮೈಕ್ರೊಸಾಫ್ಟ್ನ ವಿಂಡೋಸ್ ಶ್ರೇಣಿಯ ಆಪರೇಟಿಂಗ್ ಸಿಸ್ಟಮ್ ಗಳು ಯು ಟಿ ಎಫ್ -೧೬ನ್ನು ಬಹಳವಾಗಿ ಉಪಯೋಗಿಸುತ್ತವೆ. ಯುನಿಕೋಡ್ ಎಂಬ ವಿಶ್ವಸಂಕೇತ ಅಂಗಡಿಗೆ ಹೋಗಿ ಒಂದು ಬಲ್ಬ್ ಬೇಕೆಂದು ಕೇಳಿ ನೋಡಿ. ಅಂಗಡಿಯಾತ ನಿಮ್ಮ ಮನೆಯಲ್ಲಿ ಯಾವ ಕಂಪೆನಿಯ ಹೋಲ್ಡರ್ ಇದೆ ಎಂದು ಕೇಳುವುದಿಲ್ಲ. ಯಾಕೆಂದರೆ ಯಾವ ಕಂಪೆನಿಯ ಹೋಲ್ಡರ್ ಆದರೇನು, ಎಲ್ಲ ಬಲ್ಬ್‌ಗಳು ಎಲ್ಲ ಹೋಲ್ಡರ್‌ಗಳಲ್ಲಿ ಕೆಲಸ ಮಾಡುತ್ತವೆ. ಈಗ ಕನ್ನಡ ಮತ್ತು ಗಣಕ ಕ್ಷೇತ್ರಕ್ಕೆ ಬನ್ನಿ. ನಿಮ್ಮ ಮನೆಯ ಗಣಕದಲ್ಲಿ ಕಡತವೊಂದನ್ನು ತಯಾರಿಸಿ ಫ್ಲಾಪಿಯಲ್ಲಿ ತುಂಬಿಸಿ ಅದರ ಲೇಸರ್ ಮುದ್ರಣಕ್ಕೆ ಯಾವುದಾದರು ಡಿ.ಟಿ.ಪಿ. ಕೇಂದ್ರಕ್ಕೆ ತೆಗೆದುಕೊಂದು ಹೋಗಿ. ಆತ ನಿಮ್ಮನ್ನು ಖಂಡಿತವಾಗಿ ಕೇಳುವ ಪ್ರಶ್ನೆಯೆಂದರೆ "ನೀವು ಯಾವ ತಂತ್ರಾಂಶ ತಯಾರಿಸಿ ಕಡತವನ್ನು ತಯಾರು ಮಾಡಿದ್ದೀರಾ?". ನೀವು ಬಳಸಿದ ತಂತ್ರಾಂಶ ಆತನ ಗಣಕದಲ್ಲಿ ಇಲ್ಲದಿರುವ ಸಂಭವವೇ ಹೆಚ್ಚು. ಕನ್ನಡದ ಯಾವುದೇ ತಂತ್ರಾಂಶವನ್ನು ಬಳಸಿ ತಯಾರಿಸಿದ ಕಡತವನ್ನು ಕನ್ನಡದ ಯಾವುದೇ ತಂತ್ರಾಂಶದಲ್ಲಿ ಓದಲು ಸಾಧ್ಯವಿರಬೇಕಲ್ಲವೇ, ಎಂದು ನಿಮಗೆ ಅನ್ನಿಸಿರಬೇಕಲ್ಲವೇ? ಅದನ್ನು ಸಾಧ್ಯಮಾಡಿಕೊಡುವುದೇ ಈ ಯುನಿಕೋಡ್. ಕನ್ನಡದಲ್ಲಿ ಕಡತವೊಂದನ್ನು ತಯಾರಿಸಿ ಜಪಾನಿಗೆ ಕಳುಹಿಸಿದರೆ ಅವರಿಗೆ ಇದು ಕನ್ನಡ ಭಾಷೆಯಲ್ಲಿದೆ ಎಂದು ತಿಳಿಯುವುದು ಹೇಗೆ? ವಿಶ್ವಕ್ಕೆಲ್ಲ ಒಂದೇ ಸಂಕೇತ ವಿಧಾನ ಇದ್ದರೆ ಒಳ್ಳೆಯದಲ್ಲವೇ? ಇದುವೇ ಯುನಿಕೋಡ್. ನಾವು ಇಂಗ್ಲೀಷ್ನಲ್ಲಿ ಮಾತನಾಡುವಾಗ ಕನ್ನಡದಲ್ಲಿ ಆಲೋಚಿಸಿ ಇಂಗ್ಲೀಷ್ ಗೆ ಅನುವಾದಿಸಿ ಮಾತನಾಡುತ್ತೇವಲ್ಲವೇ? ಗಣಕಗಳು ಕನ್ನಡದಲ್ಲಿ ವ್ಯವಹರಿಸುವುದು ಸುಮಾರಾಗಿ ಹಾಗೆಯೇ. ಮಾಹಿತಿಯ ಸಂಗ್ರಹಣೆಗೆ ಒಂದು ಸಂಕೇತ, ತೋರಿಸಲು ಇನ್ನೊಂದು ಸಂಕೇತ. ಮಾಹಿತಿಯ ಸಂಗ್ರಹಣೆಗೆ ಭಾರತೀಯ ಭಾಷೆಗಳಿಗೆ ಬಳಸುತ್ತಿರುವುದು ಇಸ್ಕಿಯನ್ನು (ISCII = Indian Script Code for Information Interchange). ಇಸ್ಕಿಯು ಆಸ್ಕಿಯನ್ನು (ASCII = American Standards Code for Information Interchange) ಆಧರಿಸಿದೆ. ಆಸ್ಕಿ ಮತ್ತು ಇಸ್ಕಿ ಆಸ್ಕಿ ೮ ಬಿಟ್‌ಗಳನ್ನು ಹೊಂದಿದೆ. ಗಣಕದಲ್ಲಿ ಮಾಹಿತಿಯ ಒಂದು ತುಣಕೇ ಬಿಟ್ (bit = binary digit). ವಿದ್ಯುತ್ತಿಗೆ ಎರಡೇ ಸಾಧ್ಯತೆಗಳಿರುವುದು -ಇದೆ ಅಥವಾ ಇಲ್ಲ. ವಿದ್ಯುತ್ ಇದೆ ಎಂದರೆ "ಒಂದು", ಇಲ್ಲ ಎಂದರೆ "ಸೊನ್ನೆ" ಎಂದು ತೆಗೆದುಕೊಂಡರೆ ಒಂದು ಬಿಟ್‌ನಲ್ಲಿ ೦ ಅಥವಾ ೧ ಅನ್ನು ಸೂಚಿಸಬಹದು. ಒಂದು ಅಕ್ಷರವನ್ನು ಶೇಖರಿಸಲು ಎರಡು ಬಿಟ್‌ಗಳನ್ನು ತೆಗೆದುಕೊಂಡರೆ ಒಟ್ಟು ನಾಲ್ಕು ಸಾಧ್ಯತೆಗಳಿವೆ -೦೦, ೦೧, ೧೦ ಮತ್ತು ೧೧ (ದ್ವಿಮಾನ). ಇವು ದಶಮಾನ ಪದ್ಧತಿಯಲ್ಲಿ ೦, ೧, ೨, ೩ ಆಗುತ್ತವೆ. ಆಸ್ಕಿ ಮತ್ತು ಇಸ್ಕಿಗಳು ೮ ಬಿಟ್‌ಗಳನ್ನು ಬಳಸುತ್ತವೆ. ೮ ಬಿಟ್‌ಗಳನ್ನು ಬಳಸುವ ಯಾವುದೇ ಸಂಕೇತೀಕರಣ ವಿಧಾನವು ೨೫೬ (೨೮ = ೨೫೬) ಅಕ್ಷರಗಳನ್ನು ಮಾತ್ರವೇ ಹೊಂದಿರಬಲ್ಲುದು. ಕನ್ನಡ ಭಾಷೆಯಲ್ಲಿ ೪೯ ಅಕ್ಷರಗಳಿವೆ. ಜೊತೆಗೆ ಸ್ವರ ಚಿಹ್ನೆಗಳಿವೆ. ಇಂಗ್ಲೀಷ್ ಭಾಷೆಯಲ್ಲಿ ೨೬ (ಮತ್ತು ೨೬) ಅಕ್ಷರಗಳಿವೆ. ಬರೆವಣಿಗೆಯ ಚಿಹ್ನೆ, ಅಂಕೆ, ಇತ್ಯಾದಿಗಳೆಲ್ಲ ಒಟ್ಟು ಸೇರಿದರೂ ೨೫೬ಕ್ಕಿಂತ ಕಡಿಮೆಯೇ. ಹಾಗಿದ್ದಲ್ಲಿ ೨೫೬ ಸಂಕೇತಗಳು ಸಾಕಲ್ಲವೇ? ಇಸ್ಕಿಯಲ್ಲಿ ಮಾಹಿತಿಯನ್ನು ಸಂಗ್ರಹಿಸುವಾಗ ಇಂಗ್ಲೀಷ್ ಮತ್ತು ಒಂದು ಭಾರತೀಯ ಭಾಷೆಯನ್ನು ಬಳಸಬಹುದು. ಅಂದರೆ ಕನ್ನಡ, ಹಿಂದಿ, ತಮಿಳು, ತೆಲುಗು, ಹೀಗೆ ಹಲವು ಭಾಷೆಗಳನ್ನು ಒಂದೇ ಕಡತದಲ್ಲಿ ಸಂಗ್ರಹಿಸುವುದು ಅಸಾಧ್ಯ. ಇಸ್ಕಿಯಲ್ಲಿ ಭಾರತದ ಎಲ್ಲ ಭಾಷೆಗಳಿಗೆ ಒಂದೇ ಸಂಕೇತ ನೀಡಲಾಗಿದೆ. ಅಂದರೆ ಕನ್ನಡದ "ಕ" ಮತ್ತು ಹಿಂದಿಯ "क" ಎರಡಕ್ಕೂ ಒಂದೇ ಸಂಕೇತ ಇದೆ. ಇದರಿಂದ ಕೆಲವೊಮ್ಮೆ ಲಾಭವೂ ಇದೆ. ಒಂದು ಟೆಲಿಫೋನ್ ಡೈರೆಕ್ಟರಿಯನ್ನು ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಿಸಬೇಕಾದರೆ, ಕನ್ನಡದಲ್ಲಿ ಬೆರಳಚ್ಚು ಮಾಡಿ, ಇಸ್ಕಿಯಲ್ಲಿ ಶೇಖರಿಸಿ, ಅದನ್ನು ಹಿಂದಿಯ ಫಾಂಟ್‌ನ ಸಂಕೇತಗಳಿಗೆ ಪರಿವರ್ತಿಸಿದರೆ ಸಾಕು. ಆದರೆ ಸಮಸ್ಯೆ ಇರುವುದು ಅಕಾರಾದಿ ವಿಂಗಡಣೆಯಲ್ಲಿ. ಕನ್ನಡ, ತೆಲುಗು, ಮರಾಠಿ, ಹಿಂದಿ, ಹೀಗೆ ಎಲ್ಲ ಭಾಷೆಗಳಿಗೂ ಒಂದೆ ಅಕಾರಾದಿ ವಿಂಗಡಣೆಯ ಸೂತ್ರ ಕಲ್ಪಿಸಲಾಗಿದೆ. ಕನ್ನಡ ಮತ್ತು ಹಿಂದಿಯ ಸೂತ್ರ ಒಂದೇ ಆಗಿರಬೇಕಾಗಿಲ್ಲ. ಉದಾಹರಣೆಗೆ ಇಸ್ಕಿಯಲ್ಲಿರುವ ಅಕಾರಾದಿ ವಿಂಗಡಣೆ -"ಯ, ರ ಲ, ಳ, ವ, ಶ, ಷ, ಸ, ಹ". ಕನ್ನಡದಲ್ಲಿ ಇದು "ಯ, ರ, ಲ, ವ, ಶ, ಷ, ಸ, ಹ, ಳ" ಆಗಬೇಕು. ಯುನಿಕೋಡ್ ಪ್ರಪಂಚದ ಮಟ್ಟಿಗೆ ಹೇಳುವುದಾದರೆ ಭಾರತೀಯ ಭಾಷೆಗಳ ಜೊತೆ, ಚೀನಾ, ಜಪಾನ್, ಅರೇಬಿ, ಯುರೋಪಿನ ಭಾಷೆಗಳು, ಹೀಗೆ ನೂರಾರು ಭಾಷೆಗಳಿಗೆ ಸ್ಥಾನ ಕಲ್ಪಿಸಿ ಕೊಡಬೇಕಾಗುತ್ತದೆ. ಇದಕ್ಕೆಲ್ಲ ಮದ್ದೆಂದರೆ ೮ ಬಿಟ್‌ಗಳ ಸಂಕೇತೀಕರಣದ ಬದಲಿಗೆ ೧೬ ಬಿಟ್‌ಗಳನ್ನು ಬಳಸುವುದು. ೧೬ ಬಿಟ್‌ಗಳನ್ನು ಬಳಸುವುದರಿಂದ ಸುಮಾರು ೬೫,೦೦೦ (೨೧೬ = ೬೫೫೩೬)ಮೂಲಾಕ್ಷರಗಳಿಗೆ ಜಾಗ ಮಾಡಿಕೊಟ್ಟಂತಾಗುತ್ತದೆ. ಇದು ಪ್ರಪಂಚದ ಬಹುತೇಕ ಭಾಷೆಗಳಿಗೆ ಸಾಕು. ಇದುವೇ ಯುನಿಕೋಡ್ (Unicode). ಯುನಿಕೋಡ್ ಎಂಬುದು uniform, universal, unique ಮತ್ತು code (ಸಂಕೇತ) ಎಂಬ ಪದಗಳನ್ನು ಸೂಚಿಸುತ್ತದೆ. ಪ್ರಪಂಚಕ್ಕೆಲ್ಲಾ ಒಂದೇ ಸಂಕೇತ ವಿಧಾನ ಇರತಕ್ಕದ್ದು. ಪ್ರಪಂಚದ ಪ್ರತಿ ಭಾಷೆಯ ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಪ್ರತ್ಯೇಕ ಸಂಕೇತ ಇರಬೇಕು. ಈ ಎಲ್ಲ ಬೇಕುಗಳಿಗೆ ಉತ್ತರವೇ ಯುನಿಕೋಡ್. ಯುನಿಕೋಡ್‌ನಲ್ಲಿ ಪ್ರತಿ ಭಾಷೆಗೂ ತನ್ನದೇ ಆದ ಸಂಕೇತಶ್ರೇಣಿ ಇದೆ. ಇದು ಭಾರತೀಯ ಭಾಷೆಗಳಿಗೂ ಅನ್ವಯಿಸುತ್ತದೆ. ಯುನಿಕೋಡ್ ವಿಧಾನದಲ್ಲಿ ಮಾಹಿತಿ ಸಂಗ್ರಹಣೆ ಮಾಡಿದರೆ ಒಂದೇ ಕಡತದಲ್ಲಿ ಪ್ರಪಂಚದ ಎಲ್ಲ ಭಾಷೆಗಳಲ್ಲಿ ಮಾಹಿತಿಯನ್ನು ಶೇಖರಣೆ ಮಾಡಲು ಸಾಧ್ಯ. ಗ್ರಂಥಾಲಯವೊಂದರಲ್ಲಿ ಭಾರತದ ಎಲ್ಲ ಭಾಷೆಯ ಪುಸ್ತಕಗಳಿದ್ದಲ್ಲಿ ಅವುಗಳ ವಿವರಗಳ ದತ್ತಸಂಚಯ (database) ತಯಾರಿಸಬೇಕಾದರೆ ಯುನಿಕೋಡ್ ವಿಧಾನದಿಂದ ಮಾತ್ರ ಸಾಧ್ಯ. ಯುನಿಕೋಡ್ ಆಧಾರಿತ ತಂತ್ರಾಂಶಗಳಲ್ಲಿ ಬೆರಳಚ್ಚು ಮಾಡಿದ ಮಾಹಿತಿಯನ್ನು ನೇರವಾಗಿ ಮಾಹಿತಿ ಶೇಖರಣೆಯ ಸಂಕೇತವಾದ ಯುನಿಕೋಡ್‌ನಲ್ಲೇ ಸಂಗ್ರಹಿಸಿಡಲಾಗುತ್ತದೆ. ಅಂದರೆ ನುಡಿ, ಬರಹ, ಆಕೃತಿ, ಶ್ರೀಲಿಪಿ, ಸಿಡಾಕ್, ಇತ್ಯಾದಿ ತಂತ್ರಾಂಶಗಳಂತೆ ಅಕ್ಷರಶೈಲಿ (ಫಾಂಟ್)ಗಳ ಸಂಕೇತಗಳಲ್ಲಿ ಮಾಹಿತಿ ಸಂಗ್ರಹಣೆ ಅಲ್ಲ. ನಿಮ್ಮಲ್ಲಿ ಯುನಿಕೋಡ್ ಆಧಾರಿತ ಕನ್ನಡದ ಓಪನ್‌ಟೈಪ್ ಫಾಂಟ್ ಇರತಕ್ಕದ್ದು. ಯುನಿಕೋಡ್‌ನಲ್ಲಿ ತಯಾರಿಸಿದ ಕಡತವನ್ನು ಬೇರೊಬ್ಬರಿಗೆ ಕಳುಹಿಸುವಾಗ ಕಡತದ ಜೊತೆ ನಿಮ್ಮ ಅಕ್ಷರಶೈಲಿಯನ್ನೂ ಕಳುಹಿಸುವ ಅಗತ್ಯವಿಲ್ಲ. ನಿಮ್ಮಲ್ಲಿರುವ ಓಪನ್‌ಟೈಪ್ ಫಾಂಟ್ ಮತ್ತು ನಿಮ್ಮ ಸ್ನೇಹಿತರಲ್ಲಿರುವ ಓಪನ್‌ಟೈಪ್ ಫಾಂಟ್ ಬೇರೆ ಬೇರೆ ಇರಬಹುದು. ಮಾಹಿತಿಯನ್ನು ಅಕ್ಷರಶೈಲಿಯ ಸಂಕೇತಗಳ ಬದಲಿಗೆ ಮೂಲ ಮಾಹಿತಿಯಾಗಿಯೇ ಕಳುಹಿಸುವುದರಿಂದ ಮಾಹಿತಿ ಸಂವಹನೆಯಲ್ಲಿ ಯಾವ ತೊಡಕೂ ಇಲ್ಲ. ಯುನಿಕೋಡ್‌ನಲ್ಲಿ ಪ್ರತಿ ಭಾಷೆಗೂ ತನ್ನದೇ ಆದ ಸಂಕೇತಗಳಿರುವುದು ಮಾತ್ರವಲ್ಲ, ಪ್ರತಿ ಭಾಷೆಗೂ ತನ್ನದೇ ಆದ ಅಕಾರಾದಿ ವಿಂಗಡಣೆಯ ಸೂತ್ರವೂ ಯುನಿಕೋಡ್‌ನಲ್ಲಿದೆ. ಇಸ್ಕಿಯಲ್ಲಿರುವ ಅಕಾರಾದಿ ವಿಂಗಡಣೆಯ ಸಮಸ್ಯೆಗೆ ಯುನಿಕೋಡ್‌ನಲ್ಲಿ ಪರಿಹಾರಹವಿದೆ. ಯುನಿಕೋಡ್‌ನ ಹಳೆಯ ಆವೃತ್ತಿಯಲ್ಲಿ ಕನ್ನಡದ ಅಕಾರಾದಿ ವಿಂಗಡಣೆಗೆ ಇಸ್ಕಿಯಲ್ಲಿನ ಸೂತ್ರವನ್ನೇ ಬಳಸಲಾಗಿತ್ತು. ಆದರೆ ಯುನಿಕೋಡ್‌ನ ೪.೦ ಆವೃತ್ತಿಯಲ್ಲಿ ಈ ಸಮಸ್ಯೆಯನ್ನು ಪರಿಹರಿಸಲಾಗಿದೆ. ಪ್ರಪಂಚದ ಖ್ಯಾತ ಗಣಕ ಕಂಪೆನಿಗಳು, ತಂತ್ರಾಂಶ ತಯಾರಕರು, ದೇಶಗಳು ಸೇರಿ ಆಗಿರುವ ಒಂದು ಸಂಸ್ಥೆ ಯುನಿಕೋಡ್ ಕನ್‌ಸೋರ್ಟಿಯಂ. ಭಾರತ ದೇಶವೂ ಇದರ ಸದಸ್ಯತ್ವ ಹೊಂದಿದೆ. ಯುನಿಕೋಡ್ ಒಂದು ಕಂಪೆನಿಯ ಸ್ವತ್ತಲ್ಲ. ಮೈಕ್ರೋಸಾಫ್ಟ್‌ನವರ ವಿಂಡೋಸ್ 7, 8, ‍XP ಮತ್ತು ಸರ್ವರ್ ೨೦೦೩ ಕಾರ್ಯಾಚರಣ ವ್ಯವಸ್ಥೆಗಳಲ್ಲಿ (operating system) ಕನ್ನಡದ ಯುನಿಕೋಡ್ ಸವಲತ್ತನ್ನು ನೀಡಲಾಗಿದೆ. ವಿಂಡೋಸ್ ಎಂಇ, ೯೮, ೯೫, ಇತ್ಯಾದಿಗಳಲ್ಲಿ ಯುನಿಕೋಡ್‌ನ ಸೌಲಭ್ಯ (ಸರಿಯಾಗಿ) ಇಲ್ಲವೆಂದೇ ಹೇಳಬಹುದು. ಕನ್ನಡ ಲಿನಕ್ಸ್‌ನಲ್ಲಿ ನೇರವಾಗಿ ಯುನಿಕೋಡ್‌ನ್ನೇ ಬಳಸಲಾಗಿದೆ. ಅಂದರೆ ವಿಂಡೋಸ್‌ನಲ್ಲಿ ಯುನಿಕೋಡ್ ವಿಧಾನದಲ್ಲಿ ಕಡತವೊಂದನ್ನು ತಯಾರಿಸಿದರೆ ಅದನ್ನು ಲಿನಕ್ಸ್‌ನಲ್ಲಿ ಯಾವ ತೊಂದರೆಯೂ ಇಲ್ಲದೆ ಓದಬಹುದು. ಯುನಿಕೋಡ್ ಸಹಯೋಗ ಸಮಿತಿ ಕ್ಯಾಲಿಫೊರ್ನಿಯ ಸ್ಥಿತ ಯುನಿಕೋಡ್ ಸಹಯೋಗ ಸಮಿತಿ (Unicode Consortium) ಮೊಟ್ಟಮೊದಲಾಗಿ ೧೯೯೧ರಲ್ಲಿ "ದ ಯುನಿಕೋಡ್ ಸ್ಟ್ಯಾಂಡರ್ಡ್" (ISBN ೦-೩೨೧-೧೮೫೭೮-೧) ಎಂಬ ಸ್ಟ್ಯಾಂಡರ್ಡ್ ಹೊರತಂದಿತು. ಈಗಲೂ ಕೂಡ ಆ ಮೂಲ ಕೆಲಸವನ್ನುಪಯೋಗಿಸಿಕೊಂಡು ಹಲವು ನಿರ್ದಿಷ್ಟಮಾನಗಳನ್ನು ಹೊರತರಲಾಗುತ್ತಿದೆ. 'ಇಂಟರ್ನ್ಯಾಷನಲ್ ಆರ್ಗನೈಝೇಶನ್ ಫಾರ್ ಸ್ಟ್ಯಾಂಡರ್ಡೈಝೇಶನ್' ಜೊತೆಜೊತೆಗೆ ವಿಕಸಿತಗೊಂಡ ಯುನಿಕೋಡ್, ತನ್ನ ಅಕ್ಷರಗಳ ಸಮೃದ್ಧ ಕಣಜವನ್ನು ISO/IEC ೧೦೬೪೬ ಜೊತೆ ಹಂಚಿಕೊಳ್ಳುತ್ತಿದೆ. ಯುನಿಕೋಡ್ ಹಾಗೂ ISO/IEC ೧೦೬೪೬ ಸಮನಾದ ಅಕ್ಷರ ಎನ್ಕೋಡಿಂಗ್ ಗಳಾಗಿದ್ದರೂ, ಯುನಿಕೋಡ್ ನಿರ್ದಿಷ್ಟಮಾನ ಇಂಪ್ಲಿಮೆಂಟರ್‍ಗಳು, ಬಿಟ್ ವೈಸ್ ಎನ್ಕೋಡಿಂಗ್, ಕೊಲ್ಲೇಶನ್, ರೆಂಡರಿಂಗ್ ಹಾಗೂ ಮತ್ತಷ್ಟು ಹಲವು ವಿಷಯಗಳ ಬಗ್ಗೆ ಹೆಚ್ಚಿನ ಮಾಹಿತಿ ಹೊಂದಿದೆ. ಅದಲ್ಲದೆ, ಇವೆರಡೂ ನಿರ್ದಿಷ್ಟಮಾನಗಳು ಕೆಲವು ಅಸಮಾನ ಶಬ್ದ ಪ್ರಯೋಗಗಳನ್ನು (Terminology) ಹೊಂದಿವೆ. ಮ್ಯಾಪಿಂಗ್ ಈ ವಿವರವನ್ನು ನೋಡಿ. (ಆಂಗ್ಲ ಭಾಷೆಯಲ್ಲಿದೆ) ಯುನಿಕೋಡ್ ಪೈಪ್ ಲೈನ್ ಹೊಸ ಅಕ್ಷರಗಳನ್ನು ಈಗಾಗಲೇ ಕೂಡಿಸಲ್ಪಟ್ಟ ಯುನಿಕೋಡ್ ನಿರ್ಧಿಷ್ಟಮಾನಕ್ಕೆ ಮತ್ತು ISO/IEC 10646ಗೆ ಸ್ವೀಕರಿಸಲು ಬಹಳ ದೂರದ ಹಾದಿ ತುಳಿಯಬೇಕಾಗಬಹುದು. ಆದ್ದರಿಂದ ಇದರ ಬಳಕೆದಾರರಿಗೆ ಹಾಗು ಪ್ರಬಂಧಕರಿಗೆ ಮುಂದೆ ಬರುವ ಸೇರ್ಪಡೆಗಳೆಡೆಗೆ ಗಮನವಿರಿಸುವುದಕ್ಕೆ ಸಹಾಯ ಮಾಡಲು ಯುನಿಕೋಡ್ ಪೈಪ್ ಲೈನ್ ಟೇಬಲ್ ಇದುವರೆಗೆ ಪ್ರಸ್ತಾಪಿಸಿದ ಕೋಡ್ ಪಾಯಿಂಟ್ಗಳನ್ನು ಹಾಗು ಹೊಸ ಅಕ್ಷರಗಳ ಈಗಿನ ಸ್ಥಿತಿಯನ್ನು ತಿಳಿಸುತ್ತದೆ. ಹೊಸ ಸ್ಕ್ರಿಪ್ಟ್ ಗಳು ಅಥವಾ ಅಕ್ಷರಗಳು ಯುನಿಕೋಡ್ ಪೈಪ್ಲೈನ್ ಸೇರುವ ಮುನ್ನ 'Characters and Scripts Under Investigation' ಅಥವಾ 'Proposed new scripts' ವರ್ಗಗಳ ಕೆಳಗೆ ನಾವು ಅವನ್ನು ಕಾಣಬಹುದು. ಪ್ರಸ್ತಾವನೆಗಳು ಮುಕ್ತವಾಗಿ ನಡೆಯುವುದಲ್ಲದೆ ಎಲ್ಲೆಡೆಯಿಂದಲೂ ಪ್ರತಿಕ್ರಿಯೆಗಳನ್ನು ಆಮಂತ್ರಿಸಲಾಗುತ್ತದೆ. 'ಎನ್ಕೋಡಿಂಗ್'ಗಳು ಯುನಿಕೋಡ್ ಮತ್ತು ವಿ-ಅಂಚೆ ಅಂತರ ಜಾಲದಲ್ಲಿ ಯುನಿಕೋಡ್ ಯುನಿಕೋಡ್ ಫಾಂಟ್ ಗಳು ವಿವಾದಗಳು ಸಂಬಂದಪಟ್ಟ ಸಂಪರ್ಕಗಳು The Unicode Consortium ಜಾಲತಾಣ ಯುನಿಕೋಡ್ ಎಂದರೇನು? ಕ್ರ. ಸಂ. 1 ರಿಂದ 65535 ರವರೆಗಿನ ಯುನಿಕೋಡ್ ಅಕ್ಷರ ವಿನ್ಯಾಸಗಳ ತ:ಖ್ತೆ ಕನ್ನಡ ಯುನಿಕೋಡ್ ಕೋಷ್ಟಕ ತಂತ್ರಜ್ಞಾನ ಗಣಕ ವಿಜ್ಞಾನ
890
https://kn.wikipedia.org/wiki/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81
ಮೈಸೂರು
ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ. ಕರ್ನಾಟಕ ರಾಜ್ಯದ ಎರಡನೇ ಅತಿ ದೊಡ್ಡ ನಗರವೆಂಬ ಪ್ರಖ್ಯಾತಿಯನ್ನೂ ಪಡೆದಿದೆ. ಮೈಸೂರನ್ನ ನಮ್ಮ ಹೆಮ್ಮೆಯ ಸಾಂಸ್ಕೃತಿಕ ರಾಜಧಾನಿ ಎಂದು ಕರೆಯುತ್ತಾರೆ. ಮೈಸೂರು ನಮ್ಮ ರಾಜ್ಯ ಮಾತ್ರವಲ್ಲ ಇಡೀ ದೇಶದ ವಾರ್ಡನ್ ನಗರಗಳಲ್ಲಿ ಒಂದು. ಅದ್ಭುತವಾದ ಮೈ ನವಿರೇಳಿಸುವ ಸಂಸ್ಕೃತಿ ಮತ್ತು ಆಚಾರ ವಿಚಾರಕ್ಕೆ ಹೆಸರಾದ ಮೈಸೂರು ನಗರದಲ್ಲಿ ಮೊದಲ ಪಿರಂಗಿ ಗುಂಡು ಹಾಗೂ ರಾಕೇಟ್ಗಳ ದಾಳಿ ನಡೆದದ್ದು. ಮೈಸೂರನ್ನು ಚಂದದ ನಗರಿ ಎಂದು ಕರೆಯಲಾಗುತ್ತದೆ. ಮೈಸೂರಿನ ಅಧಿದೇವತೆ ಈಕೆಯು ಮೈಸೂರಿನ ಅಧಿದೇವತೆ, ಸಪ್ತಮಾತೃಕೆಯರಲ್ಲಿ ಏಳನೆಯವಳು. ಹಿಂದೂ ಧರ್ಮದಲ್ಲಿ, ಚಾಮುಂಡೇಶ್ವರಿ ಪ್ರಬಲವಾದ ದೇವತೆ. "ಚಾಮುಂಡಿ" ಎಂದೊಡನೆ ಈಕೆ ಶಿಷ್ಟ ಪುರಾಣದ ವಿಶಿಷ್ಟ ಶಕ್ತಿದೇವತೆ. ಆದಿಶಕ್ತಿಯಾಗಿ ಹುಟ್ಟಿ ದುಷ್ಟ ಶಿಕ್ಷಕಿ-ಶಿಷ್ಟರಕ್ಷಕಿಯಾಗಿ ಮಹಿಷೂರಿನ ಮಹಿಷನನ್ನು ಕೊಂದು, ಲೋಕ ಕಂಟಕರಾಗಿದ್ದ ಚಂಡ-ಮುಂಡರೆಂಬ ರಕ್ಕಸರನ್ನು ಸಂಹರಿಸಿ 'ಚಾಮುಂಡಿ'ಯಾಗಿದ್ದಾಳೆಂಬುದು ತಿಳಿಯುತ್ತದೆ. ಈಕೆ- ಷೋಡಶಿ, ಅಂಬೆ, ಈಶ್ವರಿ, ಚಂಡಿ, ಕಾಳಿ, ಭಗವತೀ, ಮಹೇಶ್ವರಿ, ಮಹಾದೇವಿ, ತ್ರಿಪುರ ಸುಂದರಿ, ದುರ್ಗೆ ಮುಂತಾದ ಹಲವು ಹೆಸರುಗಳಿಂದ ಕರೆಯಲ್ಪಡುತ್ತಾಳೆ. ಚಾಮುಂಡಿ ಮಹಿಷಮಂಡಲವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡು ಮಹಾಬಲಗಿರಿಯ ಮೇಲೆ ನೆಲೆಗೊಂಡಿ ದ್ದಾಳೆ. ಚಾಮುಂಡಿ ಬೆಟ್ಟವು ಸಮುದ್ರಮಟ್ಟಕ್ಕಿಂತ ಸುಮಾರು-೩೪೮೯ಅಡಿ ಎತ್ತರದಲ್ಲಿದೆ. ಮೈಸೂರಿನ ದೊಡ್ಡದೇವರಾಜ ಒಡೆಯರ್ ಅವರು ಬೆಟ್ಟವನ್ನೇರಲು ಬರುವ ಭಕ್ತಾದಿಗಳಿಗೆ ಅನುಕೂಲ ವಾಗಲೆಂದು ೧೧೦೧ ಮೆಟ್ಟಿಲುಗಳನ್ನು ಕಟ್ಟಿಸಿ, ೭೦೦ನೇ ಮೆಟ್ಟಿಲ ಬಳಿ ಬೃಹತ್ ನಂದಿ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಆಶ್ವಯುಜ ಶುಕ್ಲಪಕ್ಷದ ನವರಾತ್ರಿಯ ಸಮಯದಲ್ಲಿ ಭಾರತಾದಾದ್ಯಂತ ಚಾಮುಂಡಿ ಆರಾಧನೆ "ದುರ್ಗೆ"ಯ ಹೆಸರಿನಲ್ಲಿ ಬಹಳ ವೈಭವಯುತವಾಗಿ ನಡೆಯುತ್ತದೆ. ನವರಾತ್ರಿ ದಿನಗಳಲ್ಲಿ ಅಷ್ಟಲಕ್ಷ್ಮೀಯರ, ಅಷ್ಟದುರ್ಗೆಯರ ಆರಾಧನೆಯನ್ನು ಚಾಮುಂಡಿ ಬೆಟ್ಟದಲ್ಲಿರುವ ದೇಗುಲದಲ್ಲಿ ಮಾಡಲಾಗುತ್ತದೆ. ನವ ದಿನವು ದೇವಿಗೆ ವಿಶಿಷ್ಟವಾದ ಅಲಂಕಾರಗಳನ್ನು, ಉಡುಗೆ-ತೊಡುಗೆ, ಆಭರಣಗಳಿಂದ ಚಾಮುಂಡೇಶ್ವರಿಯನ್ನು ಸಿಂಗರಿಸಿ ಭಕ್ತವೃಂದಕ್ಕೆ ಸಂತಸವನ್ನು ನೀಡುತ್ತಾರೆ. ಮೈಸೂರು ನಗರದ ಇತಿಹಾಸ ಮೈಸೂರು ನಗರದ ಸ್ಥಾಪನೆ ಸುಮಾರು ೧೧ನೇ ಶತಮಾನದಲ್ಲಿ ನಡೆಯಿತೆಂದು ನಂಬಲಾಗಿದೆ. ೧೪ನೆಯ ಶತಮಾನದ ಕೊನೆಯ ಹೊತ್ತಿಗೆ ಒಡೆಯರ್ ವಂಶದ ಅರಸರು ಮೈಸೂರನ್ನು ಆಳಲಾರಂಭಿಸಿದರು. ಈ ವಂಶದ ಮೊದಲ ಅರಸು "ಯದುರಾಯ". ಹಾಗಾಗಿ ವಂಶದ ಹೆಸರು 'ಯದುವಂಶ' ಎಂದಾಯಿತು. ಮೊದಲಿಗೆ ವಿಜಯನಗರ ಸಾಮ್ರಾಜ್ಯದ ಭಾಗವಾಗಿದ್ದ ಮೈಸೂರು ಸಂಸ್ಥಾನ ೧೫೬೫ ರಲ್ಲಿ ವಿಜಯನಗರದ ಪತನದ ನಂತರ ಸ್ವತಂತ್ರ ರಾಜ್ಯವಾಯಿತು. ರಣಧೀರ ಕಂಠೀರವ ನರಸರಾಜ ಒಡೆಯರ್ ಈ ಸಂಸ್ಥಾನವನ್ನು ವಿಸ್ತರಿಸಿದವರಲ್ಲಿ ಮುಖ್ಯರು. ೧೮ನೆಯ ಶತಮಾನದಲ್ಲಿ ಒಡೆಯರ್ ಅರಸರ ಪ್ರಭಾವ ಕಡಿಮೆಯಾಗಿ ಹೈದರ್ ಅಲಿ ಮತ್ತು ಟೀಪು ಸುಲ್ತಾನ್‌ರ ಆಡಳಿತ ನಡೆಯಿತು. ಈ ಸಮಯದಲ್ಲಿ ಸಾಮ್ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣ ಮತ್ತು ಮೈಸೂರು ನಗರಗಳ ನಡುವೆ ಬದಲಾಗುತ್ತಿತ್ತು. ಮೈಸೂರು ಸಂಸ್ಥಾನ ಆಧುನಿಕ ಕರ್ನಾಟಕದ ದಕ್ಷಿಣ ಭಾಗದ ಬಹುಭಾಗವನ್ನು ಒಳಗೊಂಡಿತ್ತು. ೧೭೯೯ರಲ್ಲಿ ಟೀಪು ಸುಲ್ತಾನನ ಸೋಲಿನ ನಂತರ, ಬ್ರಿಟಿಷರು ಒಡೆಯರ್ ಮನೆತನವನ್ನು ಸಿಂಹಾಸನದ ಮೇಲೆ ಪುನಃ ಸ್ಥಾಪಿಸಿದರು. ೧೮೮೧ರಲ್ಲಿ ಮೈಸೂರಿನಲ್ಲಿ ೧೪೪ ಸದಸ್ಯರೊಂದಿಗೆ, ಪ್ರಜಾ ಪ್ರತಿನಿಧಿ ಸಭೆ ಸ್ಥಾಪನೆಯಾಯಿತು. ೧೮೮೧ರಲ್ಲಿ ಮಹಾರಾಣಿ ಬಾಲಕಿಯರ ಪ್ರೌಢಶಾಲೆ ಮೈಸೂರಿನಲ್ಲಿ ಆರಂಭವಾಯಿತು. ೧೮೮೨ರಲ್ಲಿ ಬೆಂಗಳೂರು ಮೈಸೂರು ರೈಲ್ವೆ ಮಾರ್ಗ ಹಾಸಿದರು. ಕೋಲಾರದ ಚಿನ್ನದ ಗಣಿ ಆರಂಭವಾಯಿತು. ೧೯೦೫ರಲ್ಲಿ ಶಿವನ ಸಮುದ್ರ ಅಣೆಕಟ್ಟಿನಿಂದ ವಿದ್ಯುತ್ ಉತ್ಪಾದನೆ ಹಾಗು ಕೋಲಾರದ ಚಿನ್ನದ ಗಣಿ, ಮತ್ತು ಬೆಂಗಳೂರಿಗೆ ವಿದ್ಯುತ್ ಸರಬರಾಜು. ಪ್ರಥಮಬಾರಿಗೆ ಭಾರತದಲ್ಲಿ ವಿದ್ಯುತ್ ದೀಪ ಬೆಳಗಿತು. ೧೯೧೬ರಲ್ಲಿ ಮೈಸೂರು ವಿಶ್ವವಿದ್ಯಾಲಯ ಸ್ಥಾಪನೆಗೊಂಡಿತು. ಮೈಸೂರು ಸಂಸ್ಥಾನದಲ್ಲಿ ಶಾಲೆಗಳ ಸಂಖ್ಯೆ ೪೫೬೮ ರಿಂದ ೧೧೨೯೪ ಕ್ಕೆ ಹೆಚ್ಚಿದವು. ಇದು ಕರ್ನಾಟಕದಲ್ಲಿ ಮೊದಲ ಕಲಿಕಾ ಕೇಂದ್ರವಾಯಿತು. ೧೯೧೧ರಲ್ಲಿ, ಸುಮಾರು ಆರು ಕೋಟಿ ರೂಪಾಯಿ ವೆಚ್ಚದಲ್ಲಿ, ಕಾವೇರಿ ನದಿಗೆ ಕನ್ನಂಬಾಡಿ [ಕೃಷ್ಣರಾಜ ಸಾಗರ] ಆಣೆಕಟ್ಟು ಕಟ್ಟಿದರು. ಹಾಗೂ ೧೯೧೬- ಭದ್ರಾವತಿಯಲ್ಲಿ ಕಬ್ಬಿಣ ಮತ್ತು ಉಕ್ಕಿನ ಉತ್ಪಾದನೆ ಕೈಗಾರಿಕೆ ನಿರ್ಮಾಣ,  ಎಚ್. ಎ. ಎಲ್. ಕಾರ್ಖಾನೆ, ಮೈಸೂರು ಲ್ಯಾಂಪ್ಸ್ ಕಾರ್ಖಾನೆ, ಮತ್ತು ಶಿವನ ಸಮುದ್ರದಲ್ಲಿ ೪೦೦೦ ಅಶ್ವಶಕ್ತಿಯ ವಿದ್ಯುತ್ ಉತ್ಪಾದನೆ ಆರಂಭಗೊಂಡವು. ದಿವಾನ್ ಸಾರ್ ಎಮ್. ವಿಶ್ವೇಶ್ವರಯ್ಯ ಇವರ ಕಾಲದಲ್ಲಿ ೩೭೨ ಮೈಲಿ ಉದ್ದದ ರೈಲ್ವೆ ಮಾರ್ಗವನ್ನು ಹಾಸಲಾಹಿತು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆಯಾಯಿತು. ಮೈಸೂರು ಬ್ರಿಟಿಷ್ ಸಾಮ್ರಾಜ್ಯದ ಕೆಳಗೆ ಉಳಿಯಿತು ಮತ್ತು ೧೮೩೪ ರಲ್ಲಿ ರಾಜಧಾನಿಯನ್ನು ಬೆಂಗಳೂರಿಗೆ ವರ್ಗಾಯಿಸಲಾಯಿತು. ಮೈಸೂರು ಸಂಸ್ಥಾನ ೧೯೪೭ರಲ್ಲಿ ಭಾರತದ ಸ್ವಾತಂತ್ರ್ಯಾನಂತರ ಭಾರತ ಗಣರಾಜ್ಯವನ್ನು ಸೇರಿ ೧೯೫೦ ರಲ್ಲಿ ಮೈಸೂರು ರಾಜ್ಯ ಎಂಬ ಹೆಸರು ಪಡೆಯಿತು. ನಂತರ, ಈ ರಾಜ್ಯ ೧೯೫೬ರ ಏಕೀಕರಣ ನಂತರ "ವಿಶಾಲ ಮೈಸೂರು ರಾಜ್ಯ" ಎಂಬ ಹೆಸರು ಪಡೆಯಿತು. ಆ ಬಳಿಕ ೧೯೭೩ರಲ್ಲಿ "ಕರ್ನಾಟಕ ರಾಜ್ಯ " ಎಂಬ ಹೆಸರು ಸ್ಥಿರವಾಯಿತು. ಮೈಸೂರು ನಗರ ಸಮುದ್ರ ಮಟ್ಟದಿಂದ ೭೭೦ ಮೀ ಎತ್ತರದಲ್ಲಿದೆ, ಹಾಗೂ ಬೆಂಗಳೂರು ನಗರದಿಂದ ೧೪೦ ಕಿ.ಮೀ. ದೂರದಲ್ಲಿದೆ. ಮೈಸೂರಿನಲ್ಲಿ ಪ್ರತಿ ವರ್ಷ ಹತ್ತು ದಿನ-ಒಂಬತ್ತು ರಾತ್ರಿಗಳವರೆಗೆ ದಸರಾ ಅಥವಾ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಿನಲ್ಲಿ ನಡೆಯುವುದು. ಉಗಮ ಮೈಸೂರು ಎಂಬ ಹೆಸರು ಆಂಗ್ಲ ಭಾಷೆಯಿಂದ ರೂಪಾಂತರಗೊಂಡಿದೆ. ಇದರ ಮೂಲ ಹೆಸರು 'ಮಹಿಷಪುರಿ', 'ಮಹಿಷೂರು'. ಇದರ ಅರ್ಥ ಮಹಿಷನ ವಾಸಸ್ಥಾನ ಎಂದು ಕನ್ನಡದಲ್ಲಿ ಹೇಳಬಹುದು. 'ಮಹಿಷ' ಎಂದರೆ ಮಹಿಷಾಸುರ ಎಂಬ ಪುರಾಣದಲ್ಲಿ ಬರುವ ಒಬ್ಬ ರಾಕ್ಷಸ. ಈತ ಮಾನವ ಮತ್ತು ಕೋಣ ಎರಡೂ ರೂಪದಲ್ಲಿ ಇರುವ ವ್ಯಕ್ತಿ. ಹಿಂದೂ ಪುರಾಣದ ಪ್ರಕಾರ ಈ ಪ್ರದೇಶವನ್ನು ರಾಕ್ಷಸ ಮಹಿಷಾಸುರನು ಆಳುತ್ತಿದ್ದ, ಆ ರಾಕ್ಷಸ ತಾಯಿ ಚಾಮುಂಡೇಶ್ವರಿಯಿಂದ ಹತನಾಗುತ್ತಾನೆ. ಬಳಿಕ ಚಾಮುಂಡೇಶ್ವರಿಯು ಅದೇ ಬೆಟ್ಟದ ಮೇಲೆ ನೆಲೆಗೊಳ್ಳುತ್ತಾಳೆ. ನಂತರ ಮಹಿ‍‌ಷೂರು>ಮಹಿಸೂರು>ಮಸೂರು ಆಗಿ ತದನಂತರ ಕೊನೆಯದಾಗಿ ಮೈಸೂರು ಎಂದು ಬದಲಾವಣೆಯಾಗಿದೆ. ಡಿಸೆಂಬರ್ ೨೦೦೫ ರಲ್ಲಿ, ಕರ್ನಾಟಕ ಸರ್ಕಾರ ಮೈಸೂರು ನಗರದ ಇಂಗ್ಲೀಷ್ ಹೆಸರನ್ನು ಬದಲಾಯಿಸಲು ಇಚ್ಛೆಯನ್ನು ಪ್ರಕಟಿಸಿತು. ಭಾರತ ಸರ್ಕಾರವು ಇದನ್ನು ಅಂಗೀಕರಿಸಿದೆ. ಆದರೆ ಹೆಸರನ್ನು ಸೇರಿಸಲು ಅಗತ್ಯ ವಿಧಿವಿಧಾನಗಳನ್ನು ಇನ್ನೂ ಪೂರ್ಣಗೊಳಿಸಿಲ್ಲ. ಚಾಮುಂಡಿ ದೇವಾಲಯದ ಇತಿಹಾಸ ಮೈಸೂರು ಇತಿಹಾಸದಲ್ಲಿ ಗಂಗರ ಆಳ್ವಿಕೆಯನ್ನು 950ರ ಹಿಂದಿನ ಶಾಸನದಲ್ಲಿ ಇದರ ಉಲ್ಲೇಖವಿದೆ. ಈಗಲೂ ಚಾಮುಂಡಿ ಬೆಟ್ಟದ ಮೇಲೆ ಇದನ್ನು ಕಾಣಬಹುದು. ನಗರದ ಚೋಳರು, ಚಾಲುಕ್ಯರು, ಹೊಯ್ಸಳರು , ವಿಜಯನಗರ ಸಾಮ್ರಾಜ್ಯ ಮತ್ತು ರಾಜವಂಶದ ನಂತರ ಗಂಗಾ ಸಾಮ್ರಾಜ್ಯವು ಮೊದಲು ಆಳ್ವಿಕೆ ನಡೆಸಿತು. ಹೊಯ್ಸಳರ ಕಟ್ಟಡ ಅಥವಾ ಚಾಮುಂಡಿ ಬೆಟ್ಟದ ಮೇಲೆ ಪ್ರಸಿದ್ಧ ಚಾಮುಂಡಿ ದೇವಸ್ಥಾನ ಸೇರಿದಂತೆ ನಗರದಲ್ಲಿ ನಿರ್ಮಿಸಿದ ಸುಂದರ ದೇವಾಲಯಗಳು ಅತ್ಯಂತ ವಿಸ್ತೃತವಾಗಿವೆ. ನಂತರ ಬೆಟ್ಟದ ಚಾಮರಾಜ ಒಡೆಯರ್ ಎಂದು ಕರೆಯಲ್ಪಡುವ ಪ್ರಸಿದ್ಧ ರಾಜ ತಮ್ಮ ಆಳ್ವಿಕೆಯಲ್ಲಿ ಕೋಟೆಯನ್ನು, ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿದ್ದರು. ನಂತರ ಮಹಿಷೂರು, ಅಂತಿಮವಾಗಿ ಮೈಸೂರಾಗಿ ಬದಲಾಯಿತು. ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣವನ್ನು ಮೈಸೂರಿಗೆ ಸ್ಥಳಾಂತರಿಸಲಾಯಿತು. ಹೀಗೆ ರಾಜ ಒಡೆಯರ್ ಆಳ್ವಿಕೆಯಲ್ಲಿ, ಮೈಸೂರು ತನ್ನ ವೈಭವವನ್ನು ಮರಳಿ ಪಡೆಯಿತು. ಶ್ರೀರಂಗಪಟ್ಟಣ ಕೋಟೆಯ ಪ್ರಾಂಗಣ ಕೃಷ್ಣರಾಜ ಒಡೆಯರ್ III ರ ಆಳ್ವಿಕೆಯಲ್ಲಿ ವಿಸ್ತರಿಸಿತು. ಇದು ನಗರದ ಅನೇಕ ಆಡಳಿತಗಾರರ ಕೊಡುಗೆಗಳನ್ನು ಹೊಂದಿದೆ. ಮೈಸೂರಿನ ಮಹಾನ್ ಎಂಜಿನಿಯರ್ ಗಳು ಒಡೆಯರ್ ಅವರ ಆಳ್ವಿಕೆಯ ಕಾಲದಲ್ಲಿ, ವಿಶಿಷ್ಟ ಆಳ್ವಿಕೆಗೆ ನೆರವಾಗಿದ್ದಾರೆ. ಅವರುಗಳಲ್ಲಿ ಪ್ರಮುಖರೆಂದರೆ- ಸರ್. ಎಂ. ವಿಶ್ವೇಶ್ವರಯ್ಯ, ಸರ್. ಮಿರ್ಜಾ ಇಸ್ಮಾಯಿಲ್, ದಿವಾನ್ ಪೂರ್ಣಯ್ಯ ಇವರುಗಳು. ಇವರ ಕಾಲದಲ್ಲಿ ವಿಶಾಲ ರಸ್ತೆಗಳು, ಕಾಲುವೆಗಳು ಮತ್ತು ಅತ್ಯಂತ ಪ್ರಸಿದ್ಧ ಕೃಷ್ಣರಾಜಸಾಗರ ಅಣೆಕಟ್ಟು ಮತ್ತು ಬೃಂದಾವನ ಗಾರ್ಡನ್ ಸಿದ್ಧಗೊಂಡವು. ಅವರು ಪ್ರಗತಿಯ ಮುಂಚೂಣಿಗೆ ನಗರವನ್ನು ತರುವ ಸಲುವಾಗಿ ಉದ್ಯಮ, ಕಲೆ, ಕೃಷಿ ಮತ್ತು ಶಿಕ್ಷಣ ಬಡ್ತಿಯನ್ನು ನೀಡುತ್ತಿದ್ದರು. ಅವರ ಕಾಲವನ್ನು "ಮೈಸೂರಿನ ಸುವರ್ಣ ಯುಗ" ಎಂದು ಕರೆಯುತ್ತಾರೆ. ಬೆಟ್ಟದ ಮೇಲೆ ಚಾಮುಂಡಿ ದೇವಾಲಯ ಒಂದು ಧಾರ್ಮಿಕ ಶಕ್ತಿ ಕೇಂದ್ರ ಎಂದು ಪ್ರಸಿದ್ಧವಾಗಿದ್ದು, ನಗರದ ಪ್ರಮುಖ ಪ್ರವಾಸಿ ಆಕರ್ಷಣೆಯ ತಾಣವಾಗಿದೆ. ದೇವಾಲಯದ ಎರಡೂ ರಸ್ತೆ 1008 ಕ್ರಮಗಳನ್ನು ನಿಲುಕಿಸಿ ಕೊಳ್ಳಬಹುದು. ಬೆಟ್ಟದ ಮೇಲೆ 700 ಹಂತಗಳನ್ನು ಏರಿಕೆಗೆ ಮತ್ತು ಮಹಿಷಾಸುರನ ಪ್ರತಿಮೆ ಹಾಗೂ ದೇವತೆ ಚಾಮುಂಡೇಶ್ವರಿಯ ಬಳಿ {BULL} ನಂದಿಯ ಒಂದು ಬೃಹತ್ ಪ್ರತಿಮೆ ಇದೆ. ಬೆಟ್ಟದ ಮೇಲಿಂದ ಇಡೀ ಮೈಸೂರು ನಗರದ ಪರಿದೃಶ್ಯವನ್ನು ಕಣ್ತುಂಬಿಕೊಳ್ಳಬಹುದು. ಅರಕೇಶ್ವರ ಸ್ವಾಮಿ ದೇವಾಲಯ ಕೃಷ್ಣರಾಜ ನಗರವು ಮೈಸೂರು ಜಿಲ್ಲೆಯ ಒಂದು ಪ್ರಮುಖ ತಾಲೂಕು ಕೇಂದ್ರವಾಗಿದ್ದು ಕಾವೇರಿ ನದಿಯ ದಡದಲ್ಲಿದೆ ಈ ನಗರವು ಇಂದೆ ಎಡ ತೊರೆ ಎಂದು ಕರೆಯಲಾಗುತ್ತಿತು ಈ ನಗರದ ಕಾವೇರಿ ದಂಡೆಯ ಮೇಲೆ ಅರಕೇಶ್ವರ ಸ್ವಾಮಿ ದೇವಸ್ಥಾನ ಇದೆ ಜಿಲ್ಲೆಯ ಒಂದು ಪ್ರಮುಖ ತಾಲೂಕು ಕೇಂದ್ರ ವಾಗಿದ್ದು. ಕಾವೇರಿ ನದಿಯ ದಡದಲ್ಲಿದೆ. ಈ ನಗರವು ಹಿಂದೆ ಯಡತೊರೆ ಎಂದು ಕರೆಯಲ್ಪಟ್ಟಿತು. ಈ ನಗರದ ಕಾವೇರಿ ದಂಡೆಯ ಮೇಲೆ ಅರಕೇಶ್ವರ ಸ್ವಾಮಿ ದೇವಸ್ಥಾನವಿದೆ. ಇದು ಜಗತ್ತಿನಲ್ಲೇ ಕಂಡು ಬರುವ ಎರಡನೇ ಸೂರ್ಯ ದೇವಾಲತವಾಗಿದೆ. ಈ ದೇವಾಲಯದಲ್ಲಿರುವ ಲಿಂಗದ ಮೇಲೆ ಶಿವರಾತ್ರಿಯಾದ ಮರುದಿನ ಸೂರ್ಯನ ಕಿರಣಗಳು ನೇರವಾಗಿ ಬೀಳುತ್ತದೆ. ಚೆನ್ನಕೇಶವ ದೇವಾಲಯ ಚನ್ನ ಕೇಶವ ದೇವಸ್ಥಾನ,ಕೇಶವ ದೇವಸ್ಥಾನ ಎಂದು ಕೂಡ ಕರೆಯಲ್ಪಡುವ ಈ ದೇವಾಲಯವು ಕರ್ನಾಟಕದ ಸೋಮನಾಥಪುರದಲ್ಲಿ ಕಾವೇರಿ ನದಿಯ ತೀರದಲ್ಲಿ ವೈಷ್ಣವ ಹಿಂದೂ ದೇವಾಲಯ ವಾಗಿದೆ.ಈ ದೇವಾಲಯವು. 1258 CE ಯಲ್ಲಿ ಹೊಯ್ಸಳ ರಾಜ ನರಸಿಂಹ111 ನ ಜನರಲ್ ಸೋಮನಾಥ ದಂಡನಾಯಕ ನಿಂದ ನಿರ್ಮಿಸಲ್ಪಟ್ಟಿತ್ತು. ಇದು ಮೈಸೂರು ನಗರದ ಪೂರ್ವಾಕ್ಕೆ 38 ಕಿಲೋ ಮೀಟರ್ ದೂರದಲ್ಲಿದೆ.. ಅಲಂಕೃತ ದೇವಸ್ಥಾನವು ಹೊಯ್ಸಳ ವಾಸ್ತುಶಿಲ್ಪದ ಒಂದು ಮಾದರಿ ಉದಾಹರಣೆಗೆ ಯಾಗಿದೆ. ದೇವಸ್ಥಾನ ವನ್ನು ಒಂದು ಸಣ್ಣ ಕಂಬಗಳ ಒಂದು ಕಂಬದ ಕಾರಿಡಾರ್ ನೊಂದಿಗೆ ಅಂಗಳದಲ್ಲಿ ಕಟ್ಟಲಾಗಿದೆ. ಇದು ಉದ್ದಕ್ಕೂ ಚೌಕಾಕಾರದ ಮಾತೃಕೆಯಲ್ಲಿ ಹೊಂದಿದ ಮೂರು ಸಂಮಿತಿಯ ಧಾರ್ಮಿಕ ಕೇಂದ್ರಗಳು ಮಧ್ಯದಲ್ಲಿ ಮುಖ್ಯ ದೇವಸ್ಥಾನವು ಉನ್ನತ ನಕ್ಷತ್ರದ ಆಕಾರದ ವೇದಿಕೆಯಾಗಿದೆ. ಮೈಸೂರು ಕರ್ನಾಟಕದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲಿ ಹಲವನ್ನು ಒಳಗೊಂಡಿದೆ. ಇಲ್ಲಿನ ಮುಖ್ಯ ಆಕರ್ಷಣೆಗಳಲ್ಲಿ ಕೆಲವೆಂದರೆ ಮೈಸೂರು ಅರಮನೆ, ಶ್ರೀ ಚಾಮರಾಜೇಂದ್ರ ಮೃಗಾಲಯ, ಚಾಮುಂಡಿ ಬೆಟ್ಟ, ಕಾರಂಜಿ ಕೆರೆ, ಕುಕ್ಕರಹಳ್ಳಿ ಕೆರೆ, ರೀಜನಲ್ ಮ್ಯೂಜಿಯಂ ಆಫ್ ನ್ಯಾಚುರಲ್ ಹಿಸ್ಟರಿ, ಜಗನ್ಮೊಹನ ಅರಮನೆ. ಮೈಸೂರಿಗೆ ಸಮೀಪದಲ್ಲಿರುವ ಆಕರ್ಷಣೆಗಳಲ್ಲಿ ಕೆಲವು ಶ್ರೀರಂಗಪಟ್ಟಣ, ಕೃಷ್ಣರಾಜಸಾಗರ, ರಂಗನತಿಟ್ಟು, ಬಂಡೀಪುರ, ತಲಕಾಡು, ಮುಡುಕುತೊರೆ ಟಿ. ನರಸೀಪುರ ಇತ್ಯಾದಿ. ಭಾರತದ ಅತಿ ಹಳೆಯ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾಲಯ ಇದೇ ನಗರದಲ್ಲಿದೆ. ಇತರ ಸಂಶೋಧನಾ ಸಂಸ್ಥೆಗಳೆಂದರೆ ಕೇಂದ್ರೀಯ ಆಹಾರ ಸಂಶೋಧನಾಲಯ (ಸಿಎಫ್‌ಟಿಆರ್‌ಐ), ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ (ಡಿಎಫ್‌ಆರ್‌ಎಲ್), ಭಾರತೀಯ ಭಾಷಾ ಸಂಸ್ಥಾನ http://www .ciil.org/. ಸ್ಥಳೀಯವಾಗಿ ಮೈಸೂರು ಎಂದು ಮೈಸೂರು , ಬೆಂಗಳೂರಿಗೆ ಮೊದಲು ಕರ್ನಾಟಕ ಪ್ರಮುಖ ನಗರವಾಗಿತ್ತು . ಈ ಅತೀಂದ್ರಿಯ ಮತ್ತು ಪೌರಾಣಿಕ ನಗರದ ದೇವತೆ ಚಾಮುಂಡೇಶ್ವರಿ, ಪಾರ್ವತಿಯ ಅವತಾರವೆಂದು ಮೂಲಕ ಚಾಮುಂಡಿ ಬೆಟ್ಟದ ಮೇಲೆ ಕೊಲ್ಲಲ್ಪ ಟ್ಟಿರಬಹುದು ಪರಿಚಿತರಾಗಿರುವ ಮಹಿಷಾಸುರ ರಾಕ್ಷಸ. 10 ದಿನ ದಸರಾವನ್ನು ಉತ್ಸವ ದುಷ್ಟ ಒಳ್ಳೆಯ ಈ ವಿಜಯವನ್ನು ಆಚರಿಸಲು ಪ್ರತಿವರ್ಷ ಆಯೋಜಿಸಲಾಗುತ್ತದೆ. ಆಧುನಿಕತೆಯ ನಗರದ ಮೇಲೆ ತನ್ನ ಪ್ರಭಾವವನ್ನು ಹೊಂದಿದ್ದರೂ, ಮೈಸೂರು ನಗರದಲ್ಲಿ ಪ್ರವಾಸೋದ್ಯಮವನ್ನು ಮಾಡಿದ್ದಾರೆ. ಇದರ ಉದ್ದೇಶ ತನ್ನ ಹಳೆಯ ಶ್ರೀಮಂತ ಪರಂಪರೆ, ಅರಮನೆ ವೈಭವಗಳು, ಅದ್ಭುತ ತೋಟಗಳು/ಉದ್ಯಾನವನಗಳ ಸಂರಕ್ಷಣೆ, ಭವ್ಯವಾದ ದೇವಾಲಯಗಳ ರಕ್ಷಣೆ, ಸಂಪ್ರದಾಯ ಮತ್ತು ಮೋಡಿಗಳನ್ನು ಉಳಿಸಿಕೊಳ್ಳವುದಾಗಿದೆ. ಚೆನ್ನಕೇಶವ ದೇವಾಲಯ:ಚನ್ನಕೇಶವ ದೇವಸ್ಥಾನ,ಕೇಶವ ದೇವಸ್ಥಾನ ಎಂದು ಕೂಡ ಕರೆಯಲ್ಪಡುವ ಈ ದೇವಾಲಯವು ಕರ್ನಾಟಕದ ಸೋಮನಾಥಪುರದಲ್ಲಿ ಕಾವೇರಿ ನದಿಯ ತೀರದಲ್ಲಿ ವೈಷ್ಣವ ಹಿಂದೂ ದೇವಾಲಯ ವಾಗಿದೆ.ಈ ದೇವಾಲಯವು. 1258 CE ಯಲ್ಲಿ ಹೊಯ್ಸಳ ರಾಜ ನರಸಿಂಹ111 ನ ಜನರಲ್ ಸೋಮನಾಥ ದಂಡನಾಯಕ ನಿಂದ ನಿರ್ಮಿಸಲ್ಪಟ್ಟಿತ್ತು. ಇದು ಮೈಸೂರು ನಗರದ ಪೂರ್ವಾಕ್ಕೆ 38 ಕಿಲೋ ಮೀಟರ್ ದೂರದಲ್ಲಿದೆ.. ಅಲಂಕೃತ ದೇವಸ್ಥಾನವು ಹೊಯ್ಸಳ ವಾಸ್ತುಶಿಲ್ಪದ ಒಂದು ಮಾದರಿ ಉದಾಹರಣೆಗೆ ಯಾಗಿದೆ. ದೇವಸ್ಥಾನ ವನ್ನು ಒಂದು ಸಣ್ಣ ಕಂಬಗಳ ಒಂದು ಕಂಬದ ಕಾರಿಡಾರ್ ನೊಂದಿಗೆ ಅಂಗಳದಲ್ಲಿ ಕಟ್ಟಲಾಗಿದೆ. ಇದು ಉದ್ದಕ್ಕೂ ಚೌಕಾಕಾರದ ಮಾತೃಕೆಯಲ್ಲಿ ಹೊಂದಿದ ಮೂರು ಸಂಮಿತಿಯ ಧಾರ್ಮಿಕ ಕೇಂದ್ರಗಳು ಮಧ್ಯದಲ್ಲಿ ಮುಖ್ಯ ದೇವಸ್ಥಾನವು ಉನ್ನತ ನಕ್ಷತ್ರದ ಆಕಾರದ ವೇದಿಕೆಯಾಗಿದೆ. <gallery> images.jpg| <gallery> ಅರಮನೆಗಳು ಮೈಸೂರು ನಗರದ "ಅರಮನೆಗಳ ನಗರ " ಎಂದು ಕರೆಯಲಾಗುತ್ತದೆ. ಆದ್ದರಿಂದ ಅರಮನೆಗಳು ಪ್ರವಾಸಿ ಆಕರ್ಷಣೆಯಾಗಿದೆ. ಇದಲ್ಲದೆ ಸಹ ಅಂಬಾವಿಲಾಸ ಅರಮನೆ ಎಂಬ ಪ್ರಸಿದ್ಧ ಮೈಸೂರು ಅರಮನೆ. ಇದಲ್ಲದೆ ಜಗನ್ ಮೋಹನ ಅರಮನೆ, ಜಯಲಕ್ಮೀ ವಿಲಾಸ ಮತ್ತು ಲಲಿತಮಹಲ್ ಗಳನ್ನು ಹೊಂದಿದೆ. ಜೊತೆಗೆ ಇಂದು ವಿವಿಧ ಉದ್ದೇಶಗಳನ್ನು ಮೂರು ಪ್ರಸಿದ್ಧ ಮಹಲುಗಳನ್ನು ಕಾರಂಜಿ ಮ್ಯಾನ್ಷನ್ ,ಜಯಲಕ್ಷ್ಮೀ ಮ್ಯಾನ್ಷನ್ ಮತ್ತು ಚೆಲುವಾಂಬ ಮ್ಯಾನ್ಷನ್ ಇವೆ. ಎಲ್ಲಾ ಮಹಲುಗಳು, ಮೈಸೂರು ಅರಮನೆ ಕಾರಂಜಿಗಳನ್ನು ಸುಂದರ ವಿಸ್ತಾರವಾದ ತೋಟಗಳು ಸುತ್ತುವರಿದಿದೆ. ಮೈಸೂರು ನಗರದಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರಿಗೆ ಅರಮನೆಗಳ ನಗರ ಎಂದೂ ಸಹ ಹೆಸರು. ಈ ಅರಮನೆಗಳಲ್ಲಿ ಕೆಲವು: ಮುಖ್ಯ ಮೈಸೂರು ಅರಮನೆ: ಮುಖ್ಯ ಮೈಸೂರು ಅರಮನೆ ಅಥವಾ "ಅಂಬಾ ವಿಲಾಸ", ೧೮೯೭ ರಲ್ಲಿ ಕಟ್ಟಲಾರಂಭಿಸಿ ೧೯೧೨ ರಲ್ಲಿ ಸಿದ್ಧವಾದ ಅರಮನೆ. ಪ್ರತಿ ಭಾನುವಾರ ಸಂಜೆ ಸಾವಿರಾರು ದೀಪಗಳಿಂದ ಸುಂದರ ದೃಶ್ಯ ೩೬೦° ನೋಟ ನೀಡುವ ಅರಮನೆ. ರಾಜೇಂದ್ರ ವಿಲಾಸ ಅರಮನೆ ಇದಕ್ಕೆ ಬೇಸಿಗೆ ಅರಮನೆ ಎಂದೂ ಹೆಸರು. ಇದು ಚಾಮುಂಡಿ ಬೆಟ್ಟದ ಮೇಲೆ ಇದೆ. ಜಗನ್ಮೋಹನ ಅರಮನೆ ಜಗನ್ಮೋಹನ ಅರಮನೆ ಈಗ ಒಂದು ಕಲಾ ಸಂಗ್ರಹಾಲಯ. ರಾಜಾ ರವಿ ವರ್ಮ ಮೊದಲಾದ ಅನೇಕ ಪ್ರಸಿದ್ಧ ಕಲಾವಿದರ ಚಿತ್ರಕೃತಿಗಳನ್ನು ಇಲ್ಲಿ ಕಾಣಬಹುದು. ಜಯಲಕ್ಷ್ಮಿ ವಿಲಾಸ ಅರಮನೆ ಈಗ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ಆವರಣದಲ್ಲಿ ಜಾನಪದ ವಸ್ತುಸಂಗ್ರಹಾಲಯವಾಗಿ ಪರಿವರ್ತಿತವಾಗಿದೆ. ಲಲಿತ ಮಹಲ್ ಅರಮನೆ ಈಗ ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ನಡೆಸುವ ಹೋಟೆಲ್ ಆಗಿ ಪರಿವರ್ತಿತವಾಗಿದೆ. ಮುಖ್ಯ ಮೈಸೂರು ಅರಮನೆಯ ಉಸ್ತುವಾರಿ ಈಗ ಕರ್ನಾಟಕ ಸರ್ಕಾರದ ಕೈಯಲ್ಲಿ ಇದ್ದರೂ, ಅರಮನೆಯ ಒಂದು ಭಾಗವನ್ನು ಹಿಂದಿನ ರಾಜಮನೆತನಕ್ಕೆ ಬಿಟ್ಟುಕೊಡಲಾಗಿದೆ. ಚಾಮುಂಡಿ ಬೆಟ್ಟ : ಬೆಟ್ಟದ ಮೇಲೆ ಚಾಮುಂಡಿ ದೇವಾಲಯ ಒಂದು ಧಾರ್ಮಿಕ ಕೇಂದ್ರ ಎಂದು ಆದರೆ ಪ್ರವಾಸಿ ಆಕರ್ಷಣೆಯ ಪ್ರಸಿದ್ಧವಾಗಿದೆ. ಚಾಮುಂಡಿ ಬೆಟ್ಟದ ನಂದಿ. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಇನ್ನೊಂದು ಚಾಮುಂಡಿ ಬೆಟ್ಟ. ಇದು ಇಲ್ಲಿನ ದೇವಸ್ಥಾನಗಳು (ಮುಖ್ಯವಾಗಿ ಚಾಮುಂಡೇಶ್ವರಿ ದೇವಾಲಯ), ದೊಡ್ಡ ನಂದಿಯ ವಿಗ್ರಹ, ಮತ್ತು ಮಹಿಷಾಸುರನ ಪ್ರತಿಮೆಗೆ ಹೆಸರಾಗಿದೆ. ಮೂಲ: ವಿಕಿಮೀಡಿಯ ಕಣಜದಲ್ಲಿ ಶ್ರೀ ಚಾಮರಾಜೇಂದ್ರ ಝೂಲಾಜಿಕಲ್ ಗಾರ್ಡನ್ಸ್ : ಮೈಸೂರು ಮೃಗಾಲಯ ಪ್ರಾಣಿ ಅದರ ವಿವಿಧ ಭೇಟಿ ಸೆಳೆಯುತ್ತದೆ. ಇದು ಭಾರತದಲ್ಲಿರುವ ಪ್ರಾಚೀನ ಪ್ರಾಣಿ ಸಂಗ್ರಹಾಲಯಗಳಲ್ಲಿ ಒಂದಾಗಿದೆ. ಮೃಗಾಲಯದ ನೈಸರ್ಗಿಕ ಸಸ್ಯವರ್ಗ ಸಮೃದ್ಧವಾಗಿದೆ ಮತ್ತು ಇದು ತುಂಬಾ ಉತ್ತಮ ಅಕ್ವೇರಿಯಂ ಹೊಂದಿದೆ. ಮೈಸೂರಿನ ಚಾಮರಾಜೇಂದ್ರ ವನ್ಯ ಮೃಗಾಲಯ ಅಥವಾ "ಮೈಸೂರು ಝೂ", ಭಾರತದ ದೊಡ್ಡ ಮೃಗಾಲಯಗಳಲ್ಲಿ ಒಂದು. ಇತ್ತೀಚೆಗೆ ಕೆಲವು ಪ್ರಾಣಿಗಳು ನಿಗೂಢವಾಗಿ ಸಾವಿಗೀಡಾಗಿದ್ದು ಈ ಮೃಗಾಲಯ ಸ್ವಲ್ಪ ವಿವಾದಕ್ಕೆ ಸಿಲುಕಿತ್ತು. ಝಿಯಾನ್ ಗಾರ್ಡನ್ಸ್ : ಝಿಯಾನ್ ಗಾರ್ಡನ್ಸ್ ವಿಶ್ವದ ತಾರಸಿ ಗಾರ್ಡನ್ಸ್ ಅತ್ಯುತ್ತಮ ಪರಿಗಣಿಸಲಾಗುತ್ತದೆ . ಕೆಆರ್ಎಸ್ ಅಣೆಕಟ್ಟಿನ ಸೈಟ್ ಇಟ್ಟ , ಗಾರ್ಡನ್ ಕೆಲವೇ ಹೆಸರಿಸಲು , ನೀರಿನ ವಾಹಕಗಳು ಕ್ಯಾಸ್ಕೇಡಿಂಗ್ ಅದರ ಸಮ್ಮಿತೀಯ ಯೋಜನೆ , ಸಂಗೀತ ಕಾರಂಜಿಗಳು ಹೆಸರುವಾಸಿಯಾಗಿವೆ. ಸೂರ್ಯನ ಕೆಳಗೆ ಹೋಗುತ್ತದೆ ಎಂದು , ಕಾರಂಜಿಗಳು ಪ್ರಕಾಶಿಸುವಂತೆ ಮತ್ತು ಅವರು ಅದ್ಭುತ ದೃಷ್ಟಿ ಇದು ರಾಗ ನೃತ್ಯ ಮಾಡಲಾಗುತ್ತದೆ . ಒಂದು ಪ್ರವಾಸಿ ತೋಟದಲ್ಲಿ ಉತ್ತಮ ದೋಣಿ ಸವಾರಿ ಆನಂದಿಸಬಹುದು . ಕೃಷ್ಣ ರಾಜ ಸಾಗರ ಅಣೆಕಟ್ಟು : ಮೂರು ನದಿಗಳು ಕಾವೇರಿ , ಹೇಮಾವತಿ ಮತ್ತು ಲಕ್ಷ್ಮಣ ತೀರ್ಥ ಒಂದೆಡೆ ಹತ್ತಿರ ನಿರ್ಮಿಸಲಾಗಿದೆ ಎಸ್ ಅಣೆಕಟ್ಟೆಯಿಂದ , ಭಾರತದ ದಕ್ಷಿಣ ಭಾಗದಲ್ಲಿ ಪ್ರಮುಖ ಜಲಾಶಯ. ಇದು ಮಹಾನ್ ಇಂಜಿನಿಯರ್ ಸರ್ ಎಂ Visvesraya ವಿನ್ಯಾಸಗೊಳಿಸಿದ ಮತ್ತು ಅದರ ಅದ್ಭುತ ಕಾಲುವೆಗಳ ಮೂಲಕ 1932 ರಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಅತ್ಯಂತ ನೀರು ಒದಗಿಸುವ ಅಣೆಕಟ್ಟು ನಿರ್ಮಿಸಲಾಗಿತ್ತು ನೀರಿನ ಹೊರಬಂದರು ಮಾಡಿದಾಗ ನೋಡು ಒಂದು ಸುಂದರ ದೃಶ್ಯ. ಸೇಂಟ್ ಫಿಲೋಮಿನಾ ಚರ್ಚ್ : ನವ್ಯ-ಗೋಥಿಕ್ ಶೈಲಿಯಲ್ಲಿ ಬೃಹತ್ ಚರ್ಚ್ ಭಾರತದ ಅತಿ ಭವ್ಯ ಚರ್ಚುಗಳು ಒಂದಾಗಿದೆ . ಚರ್ಚ್ ಅದ್ಭುತ ನೆಲಮಹಡಿಯು ಕ್ರಾಸ್ ಹೋಲುತ್ತದೆ . ಚರ್ಚ್ 175 ಅಡಿ ಎತ್ತರದ ಅವಳಿ ಗೋಪುರಗಳು ಹಲವಾರು ಮೈಲಿಗಳ ದೂರದಿಂದ ಗೋಚರಿಸುತ್ತವೆ . ಈ ಚರ್ಚ್ ಗಾಜಿನ ಚಿತ್ರಿಸಿದ ಕಿಟಕಿಗಳಿವೆ ಅವರ ಹುಟ್ಟು, ಲಾಸ್ಟ್ ಸಪ್ಪರ್ , ಶಿಲುಬೆಗೇರಿಸಿದ ಮತ್ತು ಪುನರುತ್ಥಾನದ ರೀತಿಯ ಯೇಸುಕ್ರಿಸ್ತನ ಜೀವನದಲ್ಲಿ ಘಟನೆಗಳ ದೃಶ್ಯಗಳನ್ನು ಚಿತ್ರಿಸಲು . ರೈಲು ಮ್ಯೂಸಿಯಂ : ಈ ಇತರ ದೆಹಲಿಯಲ್ಲಿ ಜೊತೆಗೆ ಭಾರತದಲ್ಲಿ ಸ್ಥಾಪನೆ ಎರಡು ರೈಲು ವಸ್ತು ಒಂದಾಗಿದೆ . ಇದು ಛಾಯಾಚಿತ್ರಗಳು , ಪುಸ್ತಕ ಮತ್ತು ಇಂಜಿನ್ ಎಂಜಿನ್ ಮತ್ತು ರೈಲು ಗಾಡಿಗಳು ಪ್ರದರ್ಶನ ಮೂಲಕ ಭಾರತೀಯ ರೈಲ್ವೆ ಹಿಂದೆ ಮೂಲಕ ಹೊಂದಿದೆ ಪ್ರಗತಿಯ ಪ್ರಯಾಣ ದಾಖಲಿಸಿದೆ. ಮೈಸೂರಿನ ಆಕರ್ಷಣೆಗಳಲ್ಲಿ ಇನ್ನೊಂದು ಮಾನಸಗಂಗೋತ್ರಿ (ಮೈಸೂರು ವಿಶ್ವವಿದ್ಯಾಲಯದ ಆವರಣ). ಇನ್ನು ಕೆಲವು ಸ್ಥಳಗಳೆಂದರೆ ನೈಸರ್ಗಿಕ ಚರಿತ್ರೆ ವಸ್ತುಸಂಗ್ರಹಾಲಯ, ರೈಲ್ವೇ ವಸ್ತುಸಂಗ್ರಹಾಲಯ, ಕಲಾ ಮಂದಿರ, ಕುಕ್ಕರಹಳ್ಳಿ ಕೆರೆ, ಪುಷ್ಪಕಾಶಿ (ಪುಷ್ಪೋದ್ಯಾನ), ಕಾರಂಜಿ ಕೆರೆ, ಮೈಸೂರು ರೇಷ್ಮೆ ಕಾರ್ಖಾನೆ ಮುಂತಾದವು. ಆಕರ್ಷಣೆಗಳು ತಿಂಡಿ ತಿನಿಸುಗಳ ವಿಷಯದಲ್ಲಿ ಮೈಸೂರಿನ - ಮೈಲಾರಿ ದೋಸೆ, ಮೈಸೂರು ಪಾಕ್, ಮೈಸೂರು ಮಲ್ಲಿಗೆ, ಮೈಸೂರು ವೀಳ್ಯದ ಎಲೆ, ಮೈಸೂರು ರೇಷ್ಮೆ ಮತ್ತು ಗಂಧದ ಎಣ್ಣೆ, ಸೋಪು ಪ್ರಸಿದ್ಧಿ. ಮೈಸೂರು ನಗರ ಪ್ರದೇಶಗಳು ಮೈಸೂರು ನಗರದ ಕೆಲವು ಪ್ರಮುಖ ಪ್ರದೇಶಗಳು- ಸಂತೇಪೇಟೆ, ಕೃಷ್ಣರಾಜ ಮೋಹಲ್ಲ, ನಜರ್ ಬಾದ್, ಕ್ಯಾತಮಾರನಹಳ್ಳಿ (ಕಂಠೀರವ ನರಸಿಂಹರಾಜಪುರ), ಕನ್ನೇಗೌಡನ ಕೊಪ್ಪಲು, ಇಟ್ಟಿಗೆಗೂಡು, ಚಾಮರಾಜ ಪುರಂ,ಕೃಷ್ಣಮೂರ್ತಿ ಪುರಂ, ಅಶೋಕಪುರಂ, ಶ್ರೀರಾಮಪುರ, ಜಯನಗರ, ಕುವೆಂಪುನಗರ, ಸರಸ್ವತಿ ಪುರಂ, ವಿದ್ಯಾರಣ್ಯಪುರಂ, ಸಿದ್ದಾರ್ಥನಗರ, ವಿವೇಕಾನಂದನಗರ, ರಾಮಕೃಷ್ಣನಗರ, ಶಾರದದೇವಿನಗರ, ತೊಣಚಿಕೊಪ್ಪಲು, ಮಾನಸಗಂಗೋತ್ರಿ, ಜಯಲಕ್ಷ್ಮಿಪುರಂ, ಒಂಟಿಕೊಪ್ಪಲು (ವಾಣಿ ವಿಲಾಸ ಮೊಹಲ್ಲ), ಗೋಕುಲಂ, ಯಾದವಗಿರಿ, ಬೃಂದಾವನ ಬಡಾವಣೆ,ಕುಂಬಾರ ಕೊಪ್ಪಲು, ಮಂಚೇಗೌಡನಕೊಪ್ಪಲು, ಲಕ್ಷ್ಮಿಕಾಂತಾನಗರ,ಹೆಬ್ಬಾಳು ಬಡಾವಣೆ, ವಿಜಯನಗರ, ಜೆ.ಪಿ.ನಗರ, ಶಿವರಾಮಪೇಟೆ, ವೀರನಗೆರೆ (ಗಾಂಧಿನಗರ), ಕನಕದಾಸನಗರ, ರೂಪನಗರ, ದೀಪನಗರ, ದಟ್ಟಗಳ್ಳಿ ಮುಂತಾದವುಗಳು. ಸಮೀಪದ ಪ್ರವಾಸಿ ಸ್ಥಳಗಳು ಶ್ರೀರಂಗಪಟ್ಟಣ ಕೃಷ್ಣರಾಜಸಾಗರ ಕಬಿನಿ ಸೋಮನಾಥಪುರ ಗೋಸಾಯಿ ಘಾಟ್, ಸಂಗಮ ನೀಲಗಿರಿ ಬೆಟ್ಟಗಳು ತಲಕಾಡು ಬಂಡಿಪುರ ಅಭಯಾರಣ್ಯ ಮದುಮಲೈ ಕಾಡುಗಳು ನಾಗರಹೊಳೆ ಅಭಯಾರಣ್ಯ ರಂಗನತಿಟ್ಟು ಪಕ್ಷಿಧಾಮ ಬಲಮುರಿ ಮತ್ತು ಎಡಮುರಿ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಬಿಳಿಗಿರಿರಂಗನ ಬೆಟ್ಟ ಕುಂತಿ ಬೆಟ್ಟ ಮೇಲುಕೋಟೆ ಚಾಮುಂಡಿ ಬೆಟ್ಟ ಲಲಿತ್ ಮಹಲ್ ಮೈಸೂರು ಜಿಲ್ಲೆ ಮೈಸೂರು ಜಿಲ್ಲೆಯ ಉತ್ತರ ಪೂರ್ವಕ್ಕೆ ಜಿಲ್ಲೆ, ದಕ್ಷಿಣ ಪೂರ್ವಕ್ಕೆ ಚಾಮರಾಜನಗರ ಜಿಲ್ಲೆ, ದಕ್ಷಿಣಕ್ಕೆ ತಮಿಳುನಾಡು ರಾಜ್ಯ, ದಕ್ಷಿಣ ಪಶ್ಚಿಮಕ್ಕೆ ಕೇರಳ ರಾಜ್ಯ, ಪಶ್ಚಿಮಕ್ಕೆ ಕೊಡಗು ಜಿಲ್ಲೆ ಮತ್ತು ಉತ್ತರಕ್ಕೆ ಹಾಸನ ಜಿಲ್ಲೆಗಳಿವೆ. ಮೈಸೂರು ಜಿಲ್ಲೆಯ ವಿಸ್ತೀರ್ಣ ೬,೨೬೮ ಚದರ ಕಿಮೀ, ಮತ್ತು ೨೦೦೧ ರ ಜನಗಣತಿಯ ಪ್ರಕಾರ ಜನಸಂಖ್ಯೆ ೨೬,೨೪,೯೧೧ - ೧೯೯೧ ರಿಂದ ಶೇಕಡ ೧೫.೦೪ ರ ಹೆಚ್ಚಳ. ಮೈಸೂರು ಜಿಲ್ಲೆ ದಖ್ಖನ ಪ್ರಸ್ತಭೂಮಿಯ ಮೇಲಿದೆ. ಅದರ ಉತ್ತರಪಶ್ಚಿಮ ಮತ್ತು ಪೂರ್ವ ಭಾಗಗಳ ಮೂಲಕ ಹರಿಯುವ ಕಾವೇರಿ ನದಿಯ ಜಲಾನಯನ ಪ್ರದೇಶದಲ್ಲಿ ಇದೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಕೃಷ್ಣರಾಜಸಾಗರ ಅಣೆಕಟ್ಟು ಜಿಲ್ಲೆಯ ಉತ್ತರದಲ್ಲಿ ಇದೆ. ಬಂಡೀಪುರ ಅಭಯಾರಣ್ಯ ಮೈಸೂರು ಜಿಲ್ಲೆಯಲ್ಲಿ ಇದ್ದರೆ ನಾಗರಹೊಳೆ ಅಭಯಾರಣ್ಯ ಭಾಗಶಃ ಮೈಸೂರು ಜಿಲ್ಲೆಯಲ್ಲಿ ಮತ್ತು ಭಾಗಶಃ ಪಕ್ಕದ ಕೊಡಗು ಜಿಲ್ಲೆಯಲ್ಲಿ ಇದೆ. ಜಿಲ್ಲೆಯ ಪ್ರಮುಖರಲ್ಲಿ ಜನಪ್ರಿಯರಾಗಿರುವ ಈರ್ವರು ಕನ್ನಡ ಕಾದಂಬರಿಕಾರ್ತಿಯರ ಹೆಸರುಗಳನ್ನು ಇಲ್ಲಿ ನಾವು ಉಲ್ಲೇಖಿಸಬಹುದಾಗಿದೆ. *ಓರ್ವರು, ಕಾದಂಬರಿಕಾರ್ತಿಯಷ್ಟೇ ಅಲ್ಲದೆ ರಾಜ್ಯಮಟ್ಟದ ನೋಂದಾಯಿಸಲ್ಪಟ್ಟ ಮಹಿಳಾ ಸಂಘಟನೆಯಾದ ಸ್ತ್ರೀಶಕ್ತಿ ಮಹಿಳಾ ಪ್ರತಿಷ್ಠಾನ ಟ್ರಸ್ತ್ ನ ಸ್ಥಾಪಕರೂ ಹಾಗೂ ಪ್ರಧಾನ ಅಧ್ಯಕ್ಷರೂ ಆದ ಶ್ರೀಮತಿ ಎಸ್. ಮಂಗಳಾ ಸತ್ಯನ್. ಇವರು ಈವರೆಗೆ ನಲವತ್ತಕ್ಕೂ ಹೆಚ್ಚು ಕಾದಂಬರಿ ಗಳನ್ನು, ನೂರ ಐವತ್ತಕ್ಕೂ ಹೆಚ್ಚು ಸಣ್ಣ ಕಥೆಗಳು, ನೂರಾರು ಲೇಖನಗಳು, ನಾಟಕಗಳನ್ನೂ ರಚಿಸಿರುವುದಲ್ಲದೆ, ನಾಲ್ಕು ಸ್ಮರಣ ಸಂಚಿಕೆಗಳನ್ನೂ ಸಂಪಾದಿಸಿದ್ದಾರೆ. ಅಲ್ಲದೆ, ಶ್ರೀಮತಿ ಮಂಗಳಾ ಸತ್ಯನ್ ೨೦೦೨ ರ ಮೇ ೨೫ ಮತ್ತು ೨೬ ರಂದು ಹಾಸನ ಜಿಲ್ಲೆಯ ಶ್ರವಣ ಬೆಳಗೊಳದಲ್ಲಿ ನಡೆದ ೬ ನೇ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಶ್ರೀಮತಿ ಮಂಗಳಾ ಸತ್ಯನ್ ರವರ "ಭಾಗ್ಯ ಜ್ಯೋತಿ", "ಮುಗ್ಧ ಮಾನವ", "ಬಿಸಿಲು ಬೆಳದಿಂಗಳು" (ಕಾದಂಬರಿಯ ಹೆಸರು "ಆ ಮುಖ"), ಮತ್ತು "ಮುರಳಿ ಗಾನ ಅಮ್ರತಪಾನ" ಕಾದಂಬರಿಗಳು ಚಲನಚಿತ್ರಗಳಾಗಿವೆ. ಅಲ್ಲದೆ, ಇವರು "ಹೂವೊಂದು ಬೇಕು ಬಳ್ಳಿಗೆ" ಮತ್ತು "ಸ್ವಾತಿ" ಚಲನಚಿತ್ರಗಳಿಗೆ ಕಥೆ ಹಾಗೂ ಸಂಭಾಷಣೆಯನ್ನು ರಚಿಸಿದ್ದಾರೆ. ಅಷ್ಟೇ ಜನಪ್ರಿಯರಾಗಿರುವ ಮತ್ತೋರ್ವ ಕಾದಂಬರಿಕಾರ್ತಿ ಶ್ರೀಮತಿ ಆರ್ಯಾಂಬ ಪಟ್ಟಾಭಿ ಅವರು. ಆರ್ಯಾಂಬ ಅವರ ಕೆಲವು ಕಾದಂಬರಿಗಳೂ ಕನ್ನಡ ಚಲನಚಿತ್ರಗಳಾಗಿ ರೂಪುಗೊಂಡಿವೆ. ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳು ಸಾರಿಗೆ ವ್ಯವಸ್ಥೆ ಮೈಸೂರು ನಗರ ಸುತ್ತಲ ಸ್ಥಳಗಳಿಗೆ ರೈಲ್ವೆ ಜಂಕ್ಷನ್. ರೈಲ್ವೇ ಮಾರ್ಗಗಳು ಮೈಸೂರನ್ನು ಮಂಡ್ಯದ ಮೂಲಕ ಬೆಂಗಳೂರಿಗೆ (ಈಶಾನ್ಯ ದಿಕ್ಕಿನಲ್ಲಿ), ವಾಯುವ್ಯ ದಿಕ್ಕಿನಲ್ಲಿ ಹಾಸನಕ್ಕೆ ಮತ್ತು ಆಗ್ನೇಯ ದಿಕ್ಕಿನಲ್ಲಿ ಚಾಮರಾಜನಗರಕ್ಕೆ ಸಂಪರ್ಕಿಸುತ್ತವೆ. ರಸ್ತೆ ಸಂಪರ್ಕ ಮೈಸೂರಿನಿಂದ ಕರ್ನಾಟಕದ ಹಾಗೂ ನೆರೆಯ ರಾಜ್ಯಗಳ ವಿವಿಧೆಡೆಗಳಿಗೆ ಇದೆ. ಕೆಲವು ವರ್ಷಗಳ ಹಿಂದೆ ಮೈಸೂರಿನ ಬಳಿ ಇರುವ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನ ವ್ಯವಸ್ಥೆ ಇತ್ತು. ಈಗ ಈ ವಿಮಾನ ನಿಲ್ದಾಣವನ್ನು ಉಪಯೋಗಿಸಲಾಗುತ್ತಿಲ್ಲ.ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಪಡಿಸಲು ಇತ್ತೀಚೆಗೆ (ಡಿಸೆಂಬರ್ ೨೦೦೫)ಕಾರ್ಯಾರಂಭ ಮಾಡಿವೆ. ಈಗ ಮ೦ಡಕಳ್ಳಿ ವಿಮಾನ ನಿಲ್ದಾಣವು ಶುರುವಾಗಿದ್ದು, ಬೆ೦ಗಳೂರಿಗೆ ಕಿ೦ಗ್ಫಫಿಶರ್ ನಿ೦ದ ವಿಮಾನ ವ್ಯವಸ್ಥೆ ಇಲ್ಲ.ಕೆವಲ ದಸರಾ ಸಮಯಕ್ಕೆ ಮಾತ್ರ. ಪ್ರಮುಖ ವ್ಯಕ್ತಿಗಳು ಎಂ. ಜಯಶ್ರೀ - ಖ್ಯಾತ ಪೋಷಕ ನಟಿ ತಿರುಮಲಾಂಬ - ಕನ್ನಡ ಮೊದಲ ಪತ್ರಕರ್ತೆ, ಪ್ರಕಾಶಕಿ; ಲೇಖಕಿ ಟಿ. ಚೌಡಯ್ಯ - ಖ್ಯಾತ ಪಿಟೀಲು ವಾದಕ ದೇವನೂರು ಮಹಾದೇವ - ಖ್ಯಾತ ಸಾಹಿತಿ ಡಿ. ದೇವರಾಜ ಅರಸ್ - ಮಾಜಿ ಮುಖ್ಯಮಂತ್ರಿ ಡಾ.ವಿಷ್ಣುವರ್ಧನ್ - ಖ್ಯಾತ ನಟ ಹುಣಸೂರು ಕೃಷ್ಣಮೂರ್ತಿ - ಚಿತ್ರ ನಿರ್ದೇಶಕ, ನಿರ್ಮಾಪಕ ಸೂರ್ಯಕೀರ್ತಿ - ಖ್ಯಾತ ಉರಗ ತಜ್ಞ, ಪರಿಸರ ಸಂರಕ್ಷಣಾವಾದಿ ಆರ್.ಕೆ.ಲಕ್ಷ್ಮಣ್ - ಚಿತ್ರಕಾರ ಇದನ್ನೂ ನೋಡಿ ಮೈಸೂರು (ಲೋಕ ಸಭೆ ಚುನಾವಣಾ ಕ್ಷೇತ್ರ) ಮೈಸೂರು ಇದು ಬಹಳ ಆಕರ್ಷಣಿಯ ಸ್ಥಳವಾಗಿದೆ. ಸಾಂಸ್ಕೃತಿಕ ನಗರಿಯ ಪರಂಪರೆ ಮತ್ತು ನಂಬಿಕೆ;ಪೃಥ್ವಿ ದತ್ತ ಚಂದ್ರ ಶೋಭಿ;14 Oct, 2016 ಬಾಹ್ಯ ಅಂತರಜಾಲ ತಾಣಗಳು ಮೈಸೂರು ನಗರಪಾಲಿಕೆ ಮೈಸೂರು ದಸರ ಮೈಸೂರು ವಿಶ್ವವಿದ್ಯಾಲಯ ಸ್ಟಾರ್ ಆಫ್ ಮೈಸೂರ್, ಇಂಗ್ಲಿಷ್‌ನಲ್ಲಿ ಸಂಜೆ ಪತ್ರಿಕೆ. ಬಿಎಸ್‌ಎನ್‌ಎಲ್ ಮೈಸೂರು ಸಮಾಚಾರ ಮೈಸೂರು ಅರಮನೆ ಮೈಸೂರಿನ ಭೂಪಟ ಆಧಾರ/ಆಕರಗಳು ಕರ್ನಾಟಕದ ಜಿಲ್ಲೆಗಳು ಭಾರತದ ಪಟ್ಟಣಗಳು ಮೈಸೂರು ಜಿಲ್ಲೆಯ ತಾಲೂಕುಗಳು ಕರ್ನಾಟಕದ ಪ್ರಮುಖ ಸ್ಥಳಗಳು ಮೈಸೂರು ತಾಲೂಕಿನ ಪ್ರವಾಸಿ ತಾಣಗಳುಭಾರತದ ಹಿಂದಿನ ರಾಜಧಾನಿ ನಗರಗಳು
897
https://kn.wikipedia.org/wiki/%E0%B2%B5%E0%B2%BF%E0%B2%9C%E0%B2%AF%E0%B2%A8%E0%B2%97%E0%B2%B0
ವಿಜಯನಗರ
ಉತ್ತರ ಕರ್ನಾಟಕದಲ್ಲಿರುವ ವಿಜಯನಗರ ಎಂಬುದು ಪ್ರಾಚೀನ ಚಾರಿತ್ರಿಕ ವಿಜಯನಗರ ಸಾಮ್ರಾಜ್ಯದ ರಾಜಧಾನಿ. ಈ ನಗರದ ಬಹುಭಾಗ ತುಂಗಭದ್ರಾ ನದಿಯ ದಕ್ಷಿಣ ದಂಡೆಯ ಮೇಲಿದೆ. ಹಂಪೆ ಎಂದು ಕರೆಯಲ್ಪಡುವ ಈ ನಗರದ ಮಧ್ಯಭಾಗದಲ್ಲಿ ಪವಿತ್ರ ವಿರೂಪಾಕ್ಷ ದೇವಾಲಯವಿದೆ . ಸುತ್ತಲೂ ಇತರ ಪವಿತ್ರ ಸ್ಥಳಗಳು ಸಹ ಇವೆ - ಸುಗ್ರೀವನ ಹುಟ್ಟೂರಾದ ಕಿಷ್ಕಿಂಧೆ ಇದ್ದ ಸ್ಥಳವೆಂದು ಹೇಳಲಾದ ಕ್ಷೇತ್ರವನ್ನು ಒಳಗೊಂಡಿವೆ. ಪ್ರಸ್ತುತ ಇದು ರಾಜಕೇಂದ್ರ ಮತ್ತು ಪವಿತ್ರಕೇಂದ್ರ ಎಂದು ಕರೆಯಲ್ಪಡುವ ಸ್ಥಳಗಳನ್ನು ಒಳಗೊಂಡ ನಗರದ ಮಧ್ಯಭಾಗ ೪೦ ಚ.ಕಿಮೀ ಗಿಂತ ಹೆಚ್ಚು ವಿಸ್ತೀರ್ಣದಲ್ಲಿ ಹಬ್ಬಿದೆ. ಇದು ಈಗಿನ ಹಂಪೆ ಗ್ರಾಮವನ್ನು ಸಹ ಕೂಡಿದೆ. ಕಮಲಾಪುರ ಎಂಬ ಗ್ರಾಮ ಹಳೆಯ ನಗರದ ಸ್ವಲ್ಪ ದೂರದಲ್ಲೇ ಇದ್ದು ಅನೇಕ ಸ್ಮಾರಕಗಳನ್ನು ಹೊಂದಿದೆ. ಇಲ್ಲಿಗೆ ಅತಿ ಹತ್ತಿರದ ನಗರ ಮತ್ತು ರೈಲ್ವೇ ನಿಲ್ದಾಣ ಎಂದರೆ ಹೊಸಪೇಟೆ, ೧೩ ಕಿಮೀ ದೂರದಲ್ಲಿದೆ. ಪ್ರಾಕೃತಿಕವಾಗಿ, ಈ ನಗರ ಎಲ್ಲ ಗಾತ್ರದ ಜಲ್ಲಿಯ ಬಂಡೆಗಳಿಂದ ಕೂಡಿದ ಗುಡ್ಡಗಾಡು ಪ್ರದೇಶದಲ್ಲಿ ಇದೆ. ಇಲ್ಲಿರುವ ಒಂದು ಕೊರಕಲಿನ ಮೂಲಕ ತುಂಗಭದ್ರಾ ನದಿ ಹರಿಯುತ್ತದೆ ಮತ್ತು ಉತ್ತರ ದಿಕ್ಕಿನಲ್ಲಿ ರಕ್ಷಣೆಯನ್ನು ಒದಗಿಸುತ್ತಿತ್ತು. ದೊಡ್ಡ ಬಂಡೆ ಕಲ್ಲಿನ ಕೋಟೆಗಳು ನಗರದ ಮಧ್ಯಭಾಗವನ್ನು ರಕ್ಷಿಸುತ್ತಿದ್ದವು. ಮೊಗಲರಿಂದ ನಾಶವಾದ ಈ ನಗರ ಯುನೆಸ್ಕೋ ಪ್ರಪಂಚ ಸಂಸ್ಕೃತಿ ಕ್ಷೇತ್ರವಾಗಿ ಮಾನ್ಯತೆ ಪಡೆದಿದೆ. ಚರಿತ್ರೆ ಹಿಂದೂ ವಿಜಯನಗರ ಸಾಮ್ರಾಜ್ಯ ೧೩೩೬ ರಲ್ಲಿ ಹಕ್ಕ (ನಂತರ ಹರಿಹರ) ಮತ್ತು ಬುಕ್ಕ (ನಂತರ ಬುಕ್ಕ ರಾಯ) ಎಂಬ ಅಣ್ಣತಮ್ಮಂದಿರಿಂದ ಸ್ಥಾಪಿಸಲ್ಪಟ್ಟಿತ್ತು. ಅವರ ಮೂಲ ಸ್ಥಾನ ಇದೇ ಕ್ಷೇತ್ರದಲ್ಲೇ ಇತ್ತೆಂದು ತಿಳಿದು ಬಂದಿದೆ. ರಾಜಧಾನಿ ಮೊದಲು ಪ್ರಾಯಶಃ ತುಂಗಭದ್ರಾ ನದಿಯ ಉತ್ತರದಲ್ಲಿ ವಿಠ್ಠಲ ದೇವಸ್ಥಾನದ ಬಳಿ ಇರುವ ಆನೆಗೊಂದಿ ಎಂಬ ಗ್ರಾಮದಲ್ಲಿತ್ತು. ಸಾಮ್ರಾಜ್ಯ ಬೆಳೆಯುತ್ತಾ ಸಮೃದ್ಧವಾದಂತೆ ರಾಜಧಾನಿಯನ್ನು ತುಂಗಭದ್ರೆಯ ದಕ್ಷಿಣದಲ್ಲಿರುವ ಹೆಚ್ಚು ಸುರಕ್ಷಿತ ವಿಜಯನಗರಕ್ಕೆ ವರ್ಗಾಯಿಸಲಾಯಿತು. ನಗರ ೧೪ನೇ ಶತಮಾನದಿಂದ ೧೬ ನೇ ಶತಮಾನದ ವರೆಗೆ ಉಚ್ಛ್ರಾಯ ಸ್ಥಿತಿಯಲ್ಲಿತ್ತು, ವಿಜಯನಗರ ಸಾಮ್ರಾಜ್ಯದ ಶಕ್ತಿಯ ತುಟ್ಟ ತುದಿಯಲ್ಲಿತ್ತು. ಇದೇ ಸಮಯದಲ್ಲಿ ಅದು ಕಾಲ ಕಾಲಕ್ಕೆ ಉತ್ತರ ದಖನ್ ಪ್ರದೇಶದಲ್ಲಿ ಇದ್ದು ಒಟ್ಟಾಗಿ ದಖನ್ ಸುಲ್ತಾನೇಟ್ ಎಂದು ಕರೆಯಲ್ಪಟ್ಟ ಮುಸ್ಲಿಮ್ ರಾಜ್ಯಗಳೊಂದಿಗೆ ಯುದ್ಧದಲ್ಲಿ ತೊಡಗುತ್ತಿತ್ತು. ೧೫೬೫ ರಲ್ಲಿ ನಗರ ಅಂತಿಮವಾಗಿ ಈ ಸುಲ್ತಾನೇಟ್‌ಗಳ ಮೈತ್ರಿತ್ವಕ್ಕೆ ಸೋತಿತು ಮತ್ತು ರಾಜಧಾನಿಯನ್ನು ವಶಪಡಿಸಿಕೊಳ್ಳಲಾಯಿತು. ಜಯ ಪಡೆದ ಸೈನಿಕರು ಅನೇಕ ತಿಂಗಳುಗಳ ಕಾಲ ವಿಜಯನಗರದಲ್ಲಿ ಕೊಲೆ, ಲೂಟಿ ನಡೆಸಿದರು. ಇದರ ನಂತರವೂ ವಿಜಯನಗರ ಸಾಮ್ರಾಜ್ಯ ಉಳಿದರೂ ಸಹ ಅದು ನಿಧಾನವಾಗಿ ಅವನತಿಯೆಡೆಗೆ ಮುಖಮಾಡಿತು. ರಾಜಧಾನಿಯಾಗಿದ್ದ ವಿಜಯನಗರವನ್ನು ಪುನರ್ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇಂದಿನವರೆಗೂ ಅಲ್ಲಿ ಜನವಸತಿಯಿಲ್ಲ. ಅಂದಿನ ಮುಸ್ಲಿಮ್ ರಾಜ್ಯಗಳ ಸಂಪರ್ಕದ ಪರಿಣಾಮವಾಗಿ ವಿಜಯನಗರದ ಕಟ್ಟಡಗಳಲ್ಲಿ ಮುಸ್ಲಿಮ್ ಪ್ರಭಾವವನ್ನು ಸ್ವಲ್ಪ ಮಟ್ಟಿಗೆ ಕಾಣಬಹುದು. ಪವಿತ್ರ ಕೇಂದ್ರ ಹಂಪೆ ಗ್ರಾಮದಿಂದ ಪೂರ್ವಕ್ಕೆ ಮಾತಂಗ ಪರ್ವತದ ವರೆಗೆ ಹಬ್ಬಿರುವ ಪ್ರದೇಶಕ್ಕೆ ಈ ಹೆಸರು. ಕೆಲವರ ಅಭಿಪ್ರಾಯದಂತೆ ವಿಠ್ಠಲ ದೇವಸ್ಥಾನದ ಪ್ರದೇಶವೂ ಇದಕ್ಕೆ ಸೇರುತ್ತದೆ. ವಿರೂಪಾಕ್ಷ ದೇವಾಲಯ ಈ ದೇವಾಲಯ ಮತ್ತು ಅದರ ಆವರಣ ಹಂಪೆ ಗ್ರಾಮದ ಮುಖ್ಯ ಭಾಗ. ಇದಕ್ಕೆ ಪಂಪಾಪತಿ ದೇವಸ್ಥಾನ ಎಂದೂ ಹೆಸರು. ೧೩ನೇ ಶತಮಾನದಿಂದ ೧೭ನೇ ಶತಮಾನದ ನಡುವೆ ಇದನ್ನು ಕಟ್ಟಿ ಬೆಳೆಸಲಾಯಿತು. ಈ ದೇವಸ್ಥಾನದಲ್ಲಿ ಎರಡು ಆವರಣಗಳು ಮತ್ತು ಗೋಪುರಗಳು ಇವೆ. ಇದರ ಎದುರು ಇರುವ ರಸ್ತೆ ಪೂರ್ವಕ್ಕೆ ಅರ್ಧ ಮೈಲು ಸಾಗುತ್ತದೆ, ನಂದಿಯ ಒಂದು ಶಿಲ್ಪದತ್ತ. ಈ ದೇವಸ್ಥಾನ ಇಂದೂ ಸಹ ಉಪಯೋಗದಲ್ಲಿದೆ. ಶಿವನ ಒಂದು ರೂಪವಾದ ವಿರೂಪಾಕ್ಷ ಮತ್ತು ಪಂಪಾ ಎಂಬ ಸ್ಥಳೀಯ ದೇವತೆಯ ದೇವಾಲಯ ಇದಾಗಿದೆ. ಕೃಷ್ಣ ದೇವಾಲಯ ಇದು ಹಂಪೆಯ ದಕ್ಷಿಣದಲ್ಲಿ ಈಗ ಪಾಳು ಬಿದ್ದಿರುವ ದೇವಸ್ಥಾನ. ಒರಿಸ್ಸಾದ ದಂಡಯಾತ್ರೆಯ ನಂತರ ಕೃಷ್ಣದೇವರಾಯ ಕಟ್ಟಿಸಿದ ದೇವಾಲಯ. ಇದರ ಕೆಲವು ಭಾಗಗಳು ಮತ್ತು ಆವರಣ ಈಗ ಕುಸಿದಿವೆ. ಉಗ್ರ ನರಸಿಂಹ ಹಂಪೆಯ ದಕ್ಷಿಣದಲ್ಲೇ ಸುಮಾರು ೨೦ ಅಡಿ ಎತ್ತರದ ಬೃಹತ್ ಗಾತ್ರದ ಕಲ್ಲಿನಲ್ಲಿ ಕೆತ್ತಿದ ವಿಷ್ಣುವಿನ ಉಗ್ರರೂಪವಾದ ಉಗ್ರ ನರಸಿಂಹನ ಮೂರ್ತಿ ಇದೆ. ಇದನ್ನು ಇತ್ತೀಚೆಗೆ ಪುನಶ್ಚೇತನಗೊಳಿಸಲಾಗಿದೆ; ಮೂರ್ತಿಯ ಮಂಡಿಯ ಬಳಿ ಇರುವ ಜಲ್ಲಿಕಲ್ಲಿನ ಪಟ್ಟಿ ಅದಕ್ಕೆ ಭದ್ರತೆಯನ್ನು ಒದಗಿಸುತ್ತದೆ. ಈ ಮೂರ್ತಿಯ ಕೆತ್ತನೆ ಕೃಷ್ಣದೇವರಾಯನಿಂದ ಅಥವಾ ಅದೇ ಕಾಲದ ಓರ್ವ ಶ್ರೀಮಂತ ವರ್ತಕರಿಂದ ಸಂದ ಧನಸಹಾಯದಿಂದ ಆದದ್ದೆಂದು ನಂಬಲಾಗಿದೆ. ಕಟ್ಟಿದಾಗ ಮೂರ್ತಿಯ ಮಂಡಿಯ ಮೇಲೆ ಒಂದು ಸಣ್ಣ ಲಕ್ಷ್ಮಿಯ ಮೂರ್ತಿ ಸಹ ಇತ್ತು; ಇದು ಪ್ರಾಯಶಃ ಲೂಟಿಯ ಪರಿಣಾಮವಾಗಿ ಬಿದ್ದು ಹೋಗಿದೆ. ಈ ಮೂರ್ತಿ ಈಗ ಕಮಲಾಪುರದ ವಸ್ತು ಸಂಗ್ರಹಾಲಯದಲ್ಲಿ ಇದೆ. ಸುಗ್ರೀವನ ಗುಹೆ ಇದು ಒಂದು ಪ್ರಾಕೃತಿಕ ಗುಹೆ, ಇಲ್ಲಿಯೇ ಶ್ರೀರಾಮ ಹನುಮಂತನನ್ನು ಮತ್ತು ಸುಗ್ರೀವನನ್ನು ಭೇಟಿಯಾದ ಎಂಬ ನಂಬಿಕೆ ಪ್ರಚಲಿತವಾಗಿದೆ. ಗುಹೆಯಲ್ಲಿ ಬಣ್ಣದ ಗುರುತುಗಳು ಮತ್ತು ತೀರ್ಥಯಾತ್ರಿಗಳ ಗುರುತುಗಳನ್ನು ಕಾಣುತ್ತೇವೆ. ಕೋದಂಡರಾಮ ದೇವಸ್ಥಾನ ಹಂಪೆಯ ಪೂರ್ವಕ್ಕೆ ಇದ್ದು, ಪವಿತ್ರ ಕೇಂದ್ರದ ನಡುವೆ ತುಂಗಭದ್ರೆಯ ಒಂದು ತಟದಲ್ಲಿ ಇರುವ ದೇವಸ್ಥಾನ. ಈ ದೇವಸ್ಥಾನ ಶ್ರೀರಾಮ ಸುಗ್ರೀವನಿಗೆ ಪಟ್ಟ ಕಟ್ಟಿದ ಸ್ಥಳವೆಂಬ ಪ್ರತೀತಿ ಇದೆ. ಈ ದೇವಸ್ಥಾನ ಸಹ ಇನ್ನೂ ಉಪಯೋಗದಲ್ಲಿದೆ. ಇಲ್ಲಿರುವ ಶ್ರೀರಾಮನ ವಿಗ್ರಹ ಸುಮಾರು ೧೮ ಅಡಿ ಎತ್ತರವಿದೆ,ಜೊತೆಗೆ ಸೀತಾ,ಲಕ್ಶ್ಮಣ ಮತ್ತು ಹನುಮಂತನ ವಿಗ್ರಹಗಳಿವೆ. ವಿಠ್ಠಲ ದೇವಸ್ಥಾನ ಹಂಪೆಯ ಉತ್ತರ ಪೂರ್ವಕ್ಕೆ, ಆನೆಗೊಂದಿಯ ಎದುರು ವಿಜಯನಗರದ ಪ್ರಮುಖ ಸ್ಮಾರಕಗಳಲ್ಲೊಂದಾದ ವಿಜಯವಿಠ್ಠಲ ದೇಗುಲವಿದೆ. ವಿಠ್ಠಲ ಮಹಾರಾಷ್ಟ್ರದಲ್ಲಿ ಪ್ರಚಲಿತವಾಗಿರುವ ವಿಷ್ಣುವಿನ ಒಂದು ರೂಪ. ಇದನ್ನು ೧೬ನೇ ಶತಮಾನದಲ್ಲಿ ಕಟ್ಟಲಾಯಿತೆಂದು ನಂಬಲಾಗಿದೆ. ಈ ದೇವಸ್ಥಾನದ ಎದುರು ಪ್ರಸಿದ್ಧ ಕಲ್ಲಿನ ರಥವಿದೆ. ಬೀದಿಗಳಲ್ಲಿ ರಥಯಾತ್ರೆ ಹೊರಡುವ ದೇವಸ್ಥಾನಗಳ ರಥಗಳನ್ನು ಹೋಲುತ್ತದೆ. ರಾಜ ಕೇಂದ್ರ ಈ ವಿಶಾಲ ಪ್ರದೇಶ ಹಂಪೆಯ ದಕ್ಷಿಣಪೂರ್ವದಲ್ಲಿ ೨ ಕಿಮೀ ದೂರದಲ್ಲಿ ಆರಂಭವಾಗಿ ಸುಮಾರು ಕಮಲಾಪುರ ಗ್ರಾಮದ ವರೆಗೆ ಹಬ್ಬಿದೆ. ಈ ಪ್ರದೇಶದಲ್ಲಿ ಅರಮನೆಗಳ ಅವಶೇಷಗಳು, ಆಡಳಿತ ಕಟ್ಟಡಗಳು ಮತ್ತು ರಾಜಮನೆತನಕ್ಕೆ ನೇರವಾಗಿ ಸಂಬಂಧಪಟ್ಟ ಕೆಲವು ದೇವಸ್ಥಾನಗಳಿವೆ. ಅಡಿಪಾಯಗಳನ್ನು ಬಿಟ್ಟರೆ ಅರಮನೆಗಳ ಅವಶೇಷಗಳು ಉಳಿದಿಲ್ಲ - ಮುಖ್ಯವಾಗಿ ಅರಮನೆಗಳು ಮರದ ದಿಮ್ಮಿಗಳಿಂದ ಕಟ್ಟಲ್ಪಟ್ಟಿದ್ದರಿಂದ. ದೇಗುಲಗಳು ಮತ್ತಿತರ ಕಲ್ಲಿನ ಕಟ್ಟಡಗಳು ಉಳಿದಿವೆ, ಸುತ್ತಲ ಕೋಟೆ ಗೋಡೆಗಳೊಂದಿಗೆ. ರಾಮಚಂದ್ರ ದೇವಸ್ಥಾನ ರಾಮನ ಅನೇಕ ಪ್ರತಿಮೆಗಳು ಕಂಡುಬರುವುದರಿಂದ ಇದಕ್ಕೆ ಹಜಾರರಾಮ ದೇವಸ್ಥಾನ ಎಂದೂ ಹೆಸರು (ಸಾವಿರ ರಾಮರ ದೇವಸ್ಥಾನ).ಇದು ಹಂಪೆಯ ದಕ್ಷಿಣಪೂರ್ವದಲ್ಲಿ ರಾಜಕೇಂದ್ರದಲ್ಲಿ ಇದೆ. ಭೂಗತ ದೇವಸ್ಥಾನ ಇದಕ್ಕೆ ಸಹ ವಿರೂಪಾಕ್ಷ ದೇವಾಲಯ ಎಂದು ಹೆಸರು. ಈ ವಿಶಾಲ ದೇಗುಲ ಉತ್ಖನನ ನಡೆಸಿದ ಪ್ರದೇಶದಲ್ಲಿ ನಿಂತಿದೆ, ಮಣ್ಣಿನ ಗೋಡೆಗಳಿಂದ ಸುತ್ತುವರಿದು..... ಲೋಟಸ್ ಮಹಲ್ ಇದು ಮಹಾರಾಣಿಯವರ ಅರಮನೆಯಾಗಿತ್ತು. ಇದರಲ್ಲಿ ಹರಿಯುವ ನೀರಿನ ಸೌಕರ್ಯವನ್ನೊಳಗೊಂಡಂತೆ ಅನೇಕ ವಿಶೇಷ ಪರಿಸರ ನಿಯಂತ್ರಣ ಉಪಕರಣಗಳಿವೆ.ಇಂಡೋ-ಇಸ್ಲಾಮಿಕ್ ವಾಸ್ತುಶಿಲ್ಪ ಕಾಣಬಹುದು. ಪುಷ್ಕರಿಣಿ ಇದು ಒಂದು ಮೆಟ್ಟಲುಗಳುಳ್ಳ ವಿಶಾಲವಾದ ಬಾವಿ, ಸ್ನಾನ ಮಾಡುವುದಕ್ಕೆ ರಚಿಸಲಾದದ್ದು. ಹಗಲಿನ ಬಿಸಿಲಿನ ಬೇಗೆಯಿಂದ ಈ ರೀತಿಯ ಬಾವಿಗಳು ಆರಾಮವನ್ನು ತರುತ್ತಿದ್ದವು. ನಗರದಲ್ಲಿ ಜನವಸತಿಯಿದ್ದಾಗ ಪ್ರಾಯಶಃ ಈ ಬಾವಿ ಶಾಮಿಯಾನಗಳಿಂದ ಆವೃತವಾಗಿರುತ್ತಿತ್ತು. ಇದನ್ನು ನಕ್ಶತ್ರ ಬಾವಿ ಎಂದೂ ಕರೆಯತ್ತಾರೆ ಇತಿಹಾಸಕಾರರಿಗೆ ದೊರೆತ ಆಧಾರ ಯಾವುದೆಂದು ತಿಳಿಯಲು ಊಹಪೊಹವೇ ಹೊರತು ನಿಜವಾದ ಮಾಹಿತಿ ಯಾರಿಂದಲೂ ಲಭ್ಯವಿಲ್ಲ. ಆನೆ ಲಾಯಗಳು ವಿಶಾಲವಾದ ಆನೆಲಾಯಗಳ ಗುಂಪು ರಾಜಮನೆತನದ ಆನೆಗಳನ್ನು ಸಾಕುವುದಕ್ಕೆ ಮೀಸಲಾಗಿತ್ತು. ಈ ಲಾಯಗಳ ಎದುರು ಇದ್ದ ಪ್ರದೇಶ ಆನೆಗಳ ಮತ್ತು ಸೈನಿಕರ ಪ್ರಭಾತಭೇರಿಗಾಗಿ ಉಪಯೋಗಿಸಲ್ಪಡುತ್ತಿತ್ತು. ಇದನ್ನು 'ಆನೆಸಾಲು' ಎಂದೂ ಕರೆಯುತ್ತಾರೆ ಇತಿಹಾಸ ಐತಿಹಾಸಿಕ ಸ್ಥಳಗಳು ಸಂಸ್ಕೃತಿ ಪ್ರವಾಸೋದ್ಯಮ
909
https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1
ಕನ್ನಡ
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನರು ಕನ್ನಡ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ. ಇವರಲ್ಲಿ ೫.೫ ಕೋಟಿ ಜನರ ಮಾತೃಭಾಷೆ ಕನ್ನಡವಾಗಿದೆ. ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಕನ್ನಡ ಲಿಪಿಯನ್ನು ಉಪಯೋಗಿಸಿ ಕನ್ನಡ ಭಾಷೆಯನ್ನು ಬರೆಯಲಾಗುತ್ತದೆ. ಕನ್ನಡ ಬರಹದ ಮಾದರಿಗಳಿಗೆ ಸಾವಿರದ ಐನೂರು ವರುಷಗಳ ಚರಿತ್ರೆಯಿದೆ. ಕ್ರಿ.ಶ. ಆರನೆಯ ಶತಮಾನದ ಪಶ್ಚಿಮ ಗಂಗ ಸಾಮ್ರಾಜ್ಯದ ಕಾಲದಲ್ಲಿ ಮತ್ತು ಒಂಬತ್ತನೆಯ ಶತಮಾನದ ರಾಷ್ಟ್ರಕೂಟ ಸಾಮ್ರಾಜ್ಯದ ಕಾಲದಲ್ಲಿ ಹಳಗನ್ನಡ ಸಾಹಿತ್ಯ ಅತ್ಯಂತ ಹೆಚ್ಚಿನ ರಾಜಾಶ್ರಯ ಪಡೆಯಿತು. ಅದಲ್ಲದೆ ಸಾವಿರ ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ.ವಿನೋಬಾ ಭಾವೆ ಕನ್ನಡ ಲಿಪಿಯನ್ನು ಲಿಪಿಗಳ ರಾಣಿಯೆಂದು ಹೊಗಳಿದ್ದಾರೆ. ಭಾಷಿಕ ಚರಿತ್ರೆ ಕನ್ನಡವು ಒಂದು ದ್ರಾವಿಡ ಭಾಷೆಯಾಗಿದೆ. ಕನ್ನಡ ಲಿಪಿ ಸುಮಾರು ೧೫೦೦-೧೬೦೦ ವರ್ಷಗಳಿಗಿಂತಲೂ ಹಿಂದಿನದು. ಐದನೆಯ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೇ ಕನ್ನಡವು ಸಾಕಷ್ಟು ಅಭಿವೃದ್ಧಿ ಹೊಂದಿತ್ತು. ದ್ರಾವಿಡ ಭಾಷಾತಜ್ಞ ಸ್ಟಾನ್‍ಫೋರ್ಡ್ ಸ್ಟೀವರ್ ಅವರ ಅಭಿಪ್ರಾಯದಂತೆ, ಕನ್ನಡದ ಭಾಷಿಕ ಚರಿತ್ರೆಯನ್ನು ಮೂರು ವಿಧವಾಗಿ ವಿಂಗಡಿಸಬಹುದು; ಹಳಗನ್ನಡ ಕ್ರಿ.ಶ. ೪೫೦ರಿಂದ ಕ್ರಿ.ಶ. ೧೨೦೦ರವರೆಗೆ, ನಡುಗನ್ನಡ ಕ್ರಿ. ಶ. ೧೨೦೦ರಿಂದ ಕ್ರಿ.ಶ. ೧೭೦೦ರವರೆಗೆ ಮತ್ತು ಹೊಸಗನ್ನಡ ಕ್ರಿ. ಶ. ೧೭೦೦ರಿಂದ ಪ್ರಸ್ತುತ ಕಾಲಘಟ್ಟದವರೆಗೆ. ಕನ್ನಡ ಭಾಷಾ ಪರಿಣತರು ಕನ್ನಡ ಸಾಹಿತ್ಯದ ಬೆಳವಣಿಗೆಯನ್ನು ಅಭ್ಯಾಸ ಮಾಡಬಹುದಾದ ಕಾಲಮಾನಗಳನ್ನು ಈ ಕೆಳಗಿನಂತೆಯೂ ನಿಷ್ಕರ್ಷಿಸಿದ್ದಾರೆ. ಪೂರ್ವದ ಹಳಗನ್ನಡ – ಅನಿಶ್ಚಿತ ಕಾಲಘಟ್ಟದಿಂದ ೭ನೇಯ ಶತಮಾನದವರೆಗೆ; ಹಳಗನ್ನಡ – ೭ರಿಂದ ೧೨ನೆಯ ಶತಮಾನದವರೆಗೆ; ನಡುಗನ್ನಡ – ೧೨ನೆಯ ಶತಮಾನದ ಪ್ರಾರಂಭದಿಂದ ೧೮ನೆಯ ಶತಮಾನದವರೆಗೆ; ಹೊಸಗನ್ನಡ – ೧೮ನೆಯ ಶತಮಾನದ ಆದಿಯಿಂದ ಈಚೆಗೆ. ಕಳೆದ ಶತಮಾನದಲ್ಲಿ ಎಂದರೆ ೨೦ನೆಯ ಶತಮಾನದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ಬಹಳ ವ್ಯಾಪಕವಾಗಿ ನಡೆಯಿತು. ಕನ್ನಡ ಭಾಷೆಯು ಅಭಿಜಾತ ಭಾಷೆಯೆಂಬ ಸ್ಥಾನಮಾನವನ್ನು ಕೇಂದ್ರ ಸರಕಾರದಿಂದ ಪಡೆದಿದೆ. ಅಂತರಜಾಲದಲ್ಲಿ ಕನ್ನಡ ಭಾಷೆಯ ಬಳಕೆ ಯಥೇಚ್ಛವಾಗಿದೆ. ಕನ್ನಡ ಭಾಷೆ ವಾಣಿಜ್ಯ ಕ್ಷೇತ್ರದಲ್ಲಿಯೂ ಮುಂಚೂಣಿಯ ಭಾಷೆಯಾಗಿ ಬೆಳೆಯತೊಡಗಿದೆ. ಕನ್ನಡದಲ್ಲಿ ಸಂಸ್ಕೃತದ ಪ್ರಭಾವ ಅಸಾಧಾರಣವಾದುದು. ಪ್ರಾಕೃತ, ಪಾಳಿ ಮುಂತಾದ ಭಾಷೆಗಳ ಪ್ರಭಾವವೂ ಕನ್ನಡಕ್ಕಿದೆ. ಕ್ರಿ.ಪೂ ಮೂರನೆಯ ಶತಮಾನಕ್ಕೂ ಮುನ್ನವೇ ಕನ್ನಡ ಮೌಖಿಕ ಪರಂಪರೆಯ ಭಾಷೆಯಾಗಿ ರೂಪುಗೊಂಡಿತ್ತೆಂಬುದಕ್ಕೂ ಪ್ರಾಕೃತ ಭಾಷೆಯಲ್ಲಿಯೂ ತಮಿಳು ಭಾಷೆಯಲ್ಲಿಯೂ ಬರೆಯಲ್ಪಟ್ಟ ಶಾಸನಗಳಲ್ಲಿ ಕನ್ನಡದ ಶಬ್ದಗಳು ಬಳಕೆಯಾಗಿವೆಯೆಂದೂ ಇತಿಹಾಸ ತಜ್ಞ ಐರಾವತಂ ಮಹಾದೇವನ್ ಸಾಬೀತುಪಡಿಸಿದ್ದಾರೆ. ಆ ಸಂಶೋಧನೆಯ ಪ್ರಕಾರ ಕನ್ನಡ ಅಗಾಧ ಪ್ರಮಾಣದ ಜನತೆ ಮಾತನಾಡುತ್ತಿದ್ದ ಭಾಷೆಯಾಗಿದ್ದಿತೆಂದೂ ತಿಳಿದುಬಂದಿದೆ. ಕೆ.ವಿ. ನಾರಾಯಣರು ಹೇಳುವಂತೆ, ಇಂದಿಗೆ ಕನ್ನಡದ ಉಪಭಾಷೆಗಳೆಂದು ಗುರುತಿಸಲ್ಪಡುವ ಭಾಷೆಗಳಲ್ಲಿ ಹೆಚ್ಚಿನವು ಕನ್ನಡದ ಹಳೆಯ ರೂಪವನ್ನು ಹೋಲುವಂಥದ್ದಾಗಿರಬಹುದು. ಅಲ್ಲದೆ ಅನ್ಯ ಭಾಷೆಗಳ ಪ್ರಭಾವ ವ್ಯಾಪಕವಾಗಿ ಒಳಗಾಗದ ಭಾಷೆಗಳು ಇವೆಂದೂ ಅಭಿಪ್ರಾಯಪಡುತ್ತಾರೆ. ಸಂಸ್ಕೃತದ ಪ್ರಭಾವ ಕನ್ನಡ ಭಾಷೆಗೆ ಪೂರ್ವಕಾಲದಿಂದಲೂ ಮೂರು ಬಗೆಯ ಪ್ರಭಾವಗಳು ಉಂಟಾಗಿವೆ; ಪಾಣಿನೀಯ ಸಂಸ್ಕೃತ ವ್ಯಾಕರಣದ್ದು, ಕಟಂತ್ರ ಮತ್ತು ಶಕಟಯಾನದಂತಹ ಅಪಾಣೀನೀಯ ವ್ಯಾಕರಣಗಳದ್ದು ಹಾಗೂ ಪ್ರಾಕೃತ ವ್ಯಾಕರಣದ್ದು. ಪ್ರಾಚೀನ ಕರ್ಣಾಟಕದಲ್ಲಿ ಗ್ರಾಂಥಿಕ ಪ್ರಾಕೃತ ಉಪಯೋಗದಲ್ಲಿತ್ತು ಎಂಬುದಕ್ಕೆ ಪುರಾವೆಗಳಿವೆ. ದೇಶ್ಯ ಪ್ರಾಕೃತವನ್ನು ಮಾತನಾಡುತ್ತಿದ್ದವರು ಮತ್ತು ಕನ್ನಡ ಮಾತನಾಡುತ್ತಿದ್ದವರ ಸಂಪರ್ಕದೊಂದಿಗೆ ಪರಸ್ಪರ ಪೋಷಿಸುತ್ತಲೇ ಬೆಳೆದುವು ಎಂಬುದೂ ಸ್ಪಷ್ಟವಾಗಿದೆ. ಕನ್ನಡ ಉಪಾಸನೆಯ ಮತ್ತು ರಾಜಸತ್ತೆಯ ಭಾಷೆಯಾಗಿ ಉಪಯೋಗಿಸಲ್ಪಡುವ ಮುನ್ನವೇ ಈ ಸಂಪರ್ಕ ಮತ್ತು ತನ್ನಿಮಿತ್ತವಾದ ಕೊಡು ಕೊಳ್ಳುಗೆ ಸಂಭವಿಸಿರಬಹುದು. ಕನ್ನಡದ ಧ್ವನಿಮಾದಲ್ಲಿಯೂ, ಸಂರಚನೆಯಲ್ಲಿಯೂ, ಶಬ್ದಸಂಪತ್ತಿಯಲ್ಲಿಯೂ, ವ್ಯಾಕರಣದಲ್ಲಿಯೂ ಹಾಗೆಯೇ ಭಾಷಿಕ ಪ್ರಯೋಗದಲ್ಲಿಯೂ ಸಂಸ್ಕೃತ ಮತ್ತು ಪ್ರಾಕೃತದ ಪ್ರಭಾವ ಸ್ಪಷ್ಟವಾಗಿದೆ. ಕನ್ನಡದಲ್ಲಿ ಬಹಳ ಸಾಮಾನ್ಯವಾಗಿ ತತ್ಸಮ ಮತ್ತು ತದ್ಭವ ಶಬ್ದಗಳನ್ನು ಕಾಣುತ್ತೇವೆ. ಕನ್ನಡದ ಬಣ್ಣ ಎಂಬ ಶಬ್ದ ಪ್ರಾಕೃತದ ವಣ್ಣ ಎಂಬ ಶಬ್ದದಿಂದ ಉಂಟಾಯಿತು ಮತ್ತು ಪ್ರಾಕೃತದ ವಣ್ಣ ಎಂಬ ಶಬ್ದ ಸಂಸ್ಕೃತದ ವರ್ಣ ಎಂಬ ಶಬ್ದದಿಂದ ಉಂಟಾಯಿತು. ಕನ್ನಡದ ಹುಣ್ಣಿಮೆ ಎಂಬ ಶಬ್ದ ಪ್ರಾಕೃತದ ಪುಣ್ಣಿವ ಎಂಬ ಶಬ್ದದಿಂದ ಉಂಟಾಯಿತು ಮತ್ತು ಪ್ರಾಕೃತದ ಪುಣ್ಣಿವ ಎಂಬ ಶಬ್ದ ಸಂಸ್ಕೃತದ ಪೌರ್ಣಮಿ ಎಂಬ ಶಬ್ದದಿಂದ ಉಂಟಾದ ತದ್ಭವವಾಗಿದೆ. ಕನ್ನಡದಲ್ಲಿ ತತ್ಸಮ ಶಬ್ದಗಳು ವ್ಯಾಪಕವಾಗಿ ಉಪಯೋಗಿಸಲ್ಪಡುತ್ತವೆ. ದಿನ, ಕೋಪ, ಸೂರ್ಯ, ಮುಖ, ನಿಮಿಷ, ಅನ್ನ ಎಂಬುವು ಕೆಲ ಉದಾಹರಣೆಗಳು. ಸಾಹಿತ್ಯ ಹಳಗನ್ನಡ ತ್ರಿಪದಿ ಛಂಧಸ್ಸಿನಲ್ಲಿ ರಚನೆಗೊಂಡ ಕನ್ನಡದ ಮೊದಲ ಕವಿತೆ ಕ್ರಿ.ಶ. ೭೦೦ರ ಕಪ್ಪೆ ಅರಭಟ್ಟನ ಶಾಸನದಲ್ಲಿ ಕಂಡುಬರುತ್ತದೆ. ರಾಜಾ ನೃಪತುಂಗ ಅಮೋಘ ವರ್ಷ‍ ರಚಿಸಿದ ಕವಿರಾಜಮಾರ್ಗ ಕನ್ನಡದಲ್ಲಿ ರಚನೆಗೊಂಡ ಮೊದಲ ಕೃತಿಯಾಗಿದೆ. ಸಾಹಿತ್ಯ ವಿಮರ್ಶೆಗಳನ್ನೂ ಕಾವ್ಯರಚನೆಯನ್ನೂ ಒಳಗೊಂಡಂಥ ಈ ಕೃತಿ ಆ ಕಾಲದಲ್ಲಿ ಅಸ್ತಿತ್ವದಲ್ಲಿ ಕನ್ನಡದ ಉಪಭಾಷೆಗಳನ್ನು ಒಂದೆಡೆ ಸೇರುವ ಪ್ರಯತ್ನ ಮಾಡಿದೆ. ಈ ಕೃತಿ ಕ್ರಿ.ಶ. ೬ನೆಯ ಶತಮಾನದ ರಾಜ ದುರ್ವಿನೀತನ ಬಗ್ಗೆಯೂ ಕ್ರಿ. ೬೩೬ರ ಐಹೊಳೆ ಶಾಸನ ಬರೆದ ರವಿಕೀರ್ತಿಯ ಬಗ್ಗೆಯೂ ವಿವರಗಳನ್ನು ನೀಡುತ್ತದೆ. ಕನ್ನಡದಲ್ಲಿ ಲಭ್ಯವಾಗಿರುವ ಮೊದಲ ಕೃತಿ ವ್ಯಾಕರಣವನ್ನು ವಿವರಿಸುವಂಥದ್ದೂ ವಿವಿಧ ಕನ್ನಡ ಉಪಭಾಷೆಗಳನ್ನು ಒಂದೆಡೆ ಸೇರಿಸುವ ಪ್ರಯತ್ನ ಮಾಡುವುದರಿಂದಲೂ ಕನ್ನಡ ಭಾಷೆಯಲ್ಲಿ ಸಾಹಿತ್ಯ ರಚನೆ ಅದಕ್ಕಿಂತಲೂ ಕೆಲ ಶತಮಾನಗಳ ಹಿಂದೆಯೇ ಆರಂಭಗೊಂಡಿರಬಹುದೆಂದು ಊಹಿಸಬಹುದಾಗಿದೆ. ಕ್ರಿ.ಶ. ೯೦೦ರಲ್ಲಿ ಶಿವಕೋಟ್ಯಾಚಾರ್ಯರು ರಚಿಸಿದ ವಡ್ಡಾರಾಧನೆ ಎಂಬ ಗದ್ಯಕೃತಿಯಲ್ಲಿ ಶ್ರವಣಬೆಳಗೊಳದ ಭದ್ರಬಾಹುವಿನ ಕುರಿತಾದ ವಿವರಗಳು ಲಭ್ಯವಾಗುತ್ತವೆ. ಪಂಪನ ಕವಿಯು ಬರೆದ ವಿಕ್ರಮಾರ್ಜುನ ವಿಜಯಂ ಹಾಗೂ ಇನ್ನಿತರ ಕೃತಿಗಳು ಇವೆ. ನಡುಗನ್ನಡ ಹದಿನೈದನೆಯ ಮತ್ತು ಹದಿನೆಂಟನೆಯ ಶತಮಾನದ ನಡುವಣ ಕಾಲ ಕನ್ನಡ ಭಾಷೆ ಮತ್ತು ಸಾಹಿತ್ಯದ ಉಚ್ಛ್ರಾಯ ಕಾಲವಾಗಿತ್ತು. ಆ ಕಾಲದ ಅತ್ಯಂತ ಶ್ರೇಷ್ಠನೆನಿಸಿಕೊಂಡ ಕವಿ ಕುಮಾರವ್ಯಾಸ ಕರ್ಣಾಟ ಭಾರತ ಕಥಾಮಂಜರಿ ಎಂಬ ಕೃತಿಯೊಂದಿಗೆ ವಿಶ್ವವಿಖ್ಯಾತನಾದನು. ಮಹಾಭಾರತವನ್ನು ಆಧರಿಸಿದ ಕೃತಿ ಭಾಮಿನಿ ಷಟ್ಪದಿ ಛಂದಸ್ಸಿನ ಪದ್ಯಗಳನ್ನೊಳಗೊಂಡಿದೆ. ಈ ಕಾಲದಲ್ಲಿ ಕನ್ನಡದ ಮೇಲೆ ಸಂಸ್ಕೃತದ ಧಾರ್ಮಿಕವೂ ಸಾಮಾಜಿಕವೂ ಆದ ಪ್ರಭಾವ ಮೂರ್ಧನ್ಯಾವಸ್ಥೆಯಲ್ಲಿತ್ತು. ಈ ಕಾಲದಲ್ಲಿ ರಾಜ್ಯಾಡಳಿತ ಮತ್ತು ಜಮೀನ್ದಾರಿಗೆ ಸಂಬಂಧಿಸಿದ ಮರಾಠಿ ಮತ್ತು ಹಿಂದಿ ಭಾಷೆಯ ಹಲವಾರು ಶಬ್ದಗಳು ಕನ್ನಡದಲ್ಲಿ ಬಳಕೆಗೆ ಬಂದುವು. ಕನಕ ದಾಸರು, ಪುರಂದರ ದಾಸರು, ನರಸಿಂಹ ತೀರ್ಥರು, ವ್ಯಾಸತೀರ್ಥರು, ಶ್ರೀಪಾದ ರಾಯರು, ವಾದಿರಾಜ ತೀರ್ಥರು, ವಿಜಯ ದಾಸರು, ಜಗನ್ನಾಥ ದಾಸರು, ಪ್ರಸನ್ನವೆಂಕಟ ದಾಸರೇ ಮೊದಲಾದ ವೈಷ್ಣವ ಸಂತರು ಕನ್ನಡದಲ್ಲಿ ದಾಸರ ಪದಗಳೆಂದು ಖ್ಯಾತವಾದ ಶ್ರೇಷ್ಠ ಭಕ್ತಿಕಾವ್ಯಗಳನ್ನು ರಚಿಸಿದರು. ಅವುಗಳಲ್ಲಿ ಹೆಚ್ಚಿನವು ಇಂದಿಗೆ ಕರ್ಣಾಟಕ ಶಾಸ್ತ್ರೀಯ ಸಂಗೀತದಲ್ಲಿ ಆದರಿಸಲ್ಪಡುವ ಕೃತಿಗಳಾಗಿವೆ. ಕನಕ ದಾಸರ ರಾಮಧಾನ್ಯ ಚರಿತೆ ಎಂಬ ಕೃತಿಯಲ್ಲಿ ಧಾನ್ಯಗಳ ರೂಪಕದೊಂದಿಗೆ ವರ್ಗ ಸಂಘರ್ಷವನ್ನು ಸೂಚಿಸಿರುವುದು ಮನಗಾಣಬಹುದು. ಇಲ್ಲಿ ಹೆಸರಿಸಲಾದ ಮತ್ತು ಇತರ ವೈಷ್ಣವ ಸಂತರು / ಹರಿದಾಸರು ತಮ್ಮ ದಾಸಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯಕ್ಕೂ ಆ ಮೂಲಕ ಕರ್ಣಾಟಕ ಸಂಗೀತಕ್ಕೂ ಶ್ರೇಷ್ಠವೆನಿಸಿದ ಕೊಡೂಗೆಗಳನ್ನು ನೀಡಿದರು. ಇವರಲ್ಲಿ ಅತ್ಯಂತ ಪ್ರಸಿದ್ಧರಾದವರು ಕರ್ಣಾಟಕ ಸಂಗೀತದ ಪಿತಾಮಹ ಎಂದು ಖ್ಯಾತರಾದ ಪುರಂದರದಾಸರು. ಹೊಸಗನ್ನಡ ಹತ್ತೊಂಬತ್ತನೆಯ ಶತಮಾನದ ನಂತರದ ಕನ್ನಡ ಕೃತಿಗಳ ಭಾಷೆಯಲ್ಲಿ ಗಮನಾರ್ಹ ವ್ಯತ್ಯಯ ಕಂಡುಬಂದಿತು. ಈ ಬಗೆಯಲ್ಲಿ ರೂಪುಗೊಂಡ ಕನ್ನಡ ಭಾಷೆಯನ್ನು ಹೊಸಗನ್ನಡ ಎಂದು ಕರೆಯುತ್ತೇವೆ. ಹೊಸಗನ್ನಡ ಬರಹಗಾರರಲ್ಲಿ ಅತ್ಯಂತ ಪ್ರಮುಖನಾದವನು ಮುದ್ದಣ ಎಂಬ ಕಾವ್ಯನಾಮದೊಂದಿಗೆ ಪ್ರಸಿದ್ಧನಾದ ನಂದಳಿಕೆ ಲಕ್ಷ್ಮಿನಾರಣಪ್ಪ. ಮುದ್ದಣನ ಕಾವ್ಯ ಕನ್ನಡದಲ್ಲಿ ಹೊಸದೊಂದು ಪರಂಪರೆಗೆ ನಾಂದಿಯಾಗಿದ್ದರೂ ಭಾಷಾವಿದಗ್ಧರು ಗುಲ್ವಾಡಿ ವೆಂಕಟರಾಯರು ಬರೆದ ಇಂದಿರಾಬಾಯಿ ಅಥವಾ ಸದ್ಧರ್ಮ ವಿಜಯವು ಎಂಬ ಕೃತಿಯನ್ನು ಹೊಸಗನ್ನಡದ ಮೊದಲ ಕೃತಿಯನ್ನು ಗುರುತಿಸುತ್ತಾರೆ. ೧೮೧೭ರಲ್ಲಿ ವಿಲಿಯಂ ಕಾರಿ ರಚಿಸಿ ಶ್ರೀರಾಮಪುರದಿಂದ ಪ್ರಕಾಶನಗೊಂಡ ಕಾನರೀಸ್ ವ್ಯಾಕರಣ ಎಂಬ ಕೃತಿ ಕನ್ನಡದಲ್ಲಿ ಮೊದಲ ಬಾರಿಗೆ ಅಚ್ಚುಗೊಂಡ ಕೃತಿಯೆಂಬ ಅಗ್ಗಳಿಕೆಗೆ ಪಾತ್ರವಾಗಿದೆ. *೧೮೨೦ರಲ್ಲಿ ಜೋನ್ ಹಾನ್ಸ್ ಬೈಬಲಿನ ಕನ್ನಡದ ಅನುವಾದವನ್ನು ಪ್ರಕಟಿಸಿದರು. ಅಚ್ಚುಗೊಂಡ ಮೊದಲ ಕಾದಂಬರಿ ಪಿಲ್‍ಗ್ರಿಂಸ್ ಪ್ರೋಗ್ರೆಸ್ ಎಂಬ ಕೃತಿಯಾಗಿದೆ. ಕಾನರೀಸ್ ಪ್ರೋವರ್ಬ್ಸ್ (ಕನ್ನಡ ಗಾದೆಗಳು) ಎಂಬ ಕೃತಿಯೂ ಮೇರಿ ಮಾರ್ತ್ ಷೆರ್ವುಡ್ ಬರೆದ ದ ಹಿಸ್ಟರಿ ಆಫ್ ಹೆನ್ರಿ ಅಂಡ್ ಹಿಸ್ ಬೇರರ್ ಎಂಬ ಕೃತಿಯೂ ಕ್ರಿಸ್ತಿಯನ್ ಗೋತ್ಲೋವ್ ಬಾರ್ತನು ಬರೆದ ಬೈಬಲ್ ಸ್ಟೋರೀಸ್ ಮತ್ತು ಕನ್ನಡ ಸ್ತೋತ್ರ ಪುಸ್ತಕ ಇಲ್ಲಿ ಪ್ರಕಾಶನಗೊಂಡವು. ಇಪ್ಪತ್ತನೆಯ ಶತಮಾನದ ಕನ್ನಡ ಸಾಹಿತ್ಯ ಹಲ ಬಗೆಯ ಚಳುವಳಿಗಳಿಂದ ಪ್ರಭಾವಗೊಂಡಿದೆ. ಇವುಗಳಲ್ಲಿ ಪ್ರಮುಖವಾದುವು ನವೋದಯ. ನವ್ಯ, ನವ್ಯೋತ್ತರ, ದಲಿತ, ಬಂಡಾಯ ಎಂಬಿವುಗಳಾಗಿವೆ. ಪ್ರಸ್ತುತ ಕನ್ನಡ ಸಾಹಿತ್ಯ ಸಮಾಜದ ಎಲ್ಲಾ ವರ್ಗಗಳನ್ನೂ ತಲುಪುತ್ತಲಿದೆ. ಅಷ್ಟಲ್ಲದೆ ಕನ್ನಡದಲ್ಲಿ ಪ್ರಸಿದ್ಧರೂ ಶ್ರೇಷ್ಠರೂ ಆದ ಕುವೆಂಪು, ದ.ರಾ.ಬೇಂದ್ರೆ, ವಿ.ಕೃ. ಗೋಕಾಕ್ ಮುಂತಾದ ಕವಿಗಳೂ ಸಾಹಿತಿಗಳೂ ಬಾಳಿ ಬದುಕಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಎಂಟು ಸಾರಿ ಜ್ಞಾನಪೀಠ ಪುರಸ್ಕಾರ ದೊರೆತಿದೆ. ಭಾರತೀಯ ಭಾಷೆಗಳ ಕೃತಿಗಳಿಗೆ ದೊರಕುವ ಜ್ಞಾನಪೀಠ ಪುರಸ್ಕಾರವು ಎಂಟು ಬಾರಿ ಕನ್ನಡ ಭಾಷೆಗೆ ದೊರೆಯಿತು. ಹಲವು ಬಾರಿ ಕೇಂದ್ರ ಸಾಹಿತ್ಯ ಅಕಾದೆಮಿ ಪುರಸ್ಕಾರಗಳೂ ಕನ್ನಡ ಭಾಷೆಗೆ ಲಭ್ಯವಾಗಿವೆ. ದಿಲ್ಲಿಯ ಕೆ. ಕೆ. ಬಿರ್ಲಾ ಫೌಂಡೇಷನ್ ಕೊಡಮಾಡುವ ಸರಸ್ವತಿ ಸಮ್ಮಾನವೂ ಕನ್ನಡ ಭಾಷೆಗೆ ಲಭ್ಯವಾಗಿದೆ. ಎಸ್. ಎಲ್. ಭೈರಪ್ಪನವರ ಮತ್ತು ಶಿವರಾಮ ಕಾರಂತರ ಕೃತಿಗಳು ಭಾರತದ ಹದಿನಾಲ್ಕು ಭಾಷೆಗಳಲ್ಲಿ ಅನುವಾದಗೊಂಡಿವೆ. ಕನ್ನಡ ಉಪಭಾಷೆಗಳು ಬರೆಯಲು ಉಪಯೋಗಿಸುವ ಮತ್ತು ಮಾತನಾಡುವ ಭಾಷೆಯಲ್ಲಿ ಇರುವ ವ್ಯತ್ಯಾಸ ಇತರ ಭಾಷೆಗಳಲ್ಲಿ ಇರುವಂತೆ ಕನ್ನಡದಲ್ಲಿಯೂ ಇದೆ. ಮಾತನಾಡಲು ಉಪಯೋಗಿಸುವ ಕನ್ನಡ ಪ್ರದೇಶಕ್ಕೆ ಅನುಸಾರವಾಗಿ ಬದಲಾಗುತ್ತದೆ. ಆದರೆ ಬರೆಯಲು ಉಪಯೋಗಿಸುವ ಕನ್ನಡ ಕರ್ಣಾಟಕದ ಹೆಚ್ಚಿನ ಎಲ್ಲೆಡೆ ಒಂದೇ ಬಗೆಯದಾಗಿದೆ. ಕುಂದಗನ್ನಡ,ಕೋಟಗನ್ನಡ, ಹವ್ಯಕ ಕನ್ನಡ, ಅರೆಭಾಷೆ (ಗೌಡಕನ್ನಡ), ಸೋಲಿಗ ಕನ್ನಡ ಎನ್ನುವಂಥ ಇಪ್ಪತ್ತರಷ್ಟು ಉಪಭಾಷೆಗಳು ಕನ್ನಡಕ್ಕಿವೆ. ಇವುಗಳಲ್ಲಿ ಕುಂದಗನ್ನಡ ಕುಂದಾಪುರದ ಸಮೀಪ ಮಾತನಾಡಲು ಉಪಯೋಗಿಸುವ ಭಾಷೆಯಾಗಿದ್ದು ಇದರಂತೆಯೇ ಹವ್ಯಕ ಮತ್ತು ಸೋಲಿಗ ಕನ್ನಡ ಆಯಾ ಸಮುದಾಯಕ್ಕೆ ಸೇರಿದವರು ಮಾತನಾಡಲು ಉಪಯೋಗಿಸುವ ಭಾಷೆಯಾಗಿದೆ. ಹೀಗೆ ಪ್ರದೇಶಕ್ಕೂ ಸಮುದಾಯಕ್ಕೂ ಅಳವಡಿಸಲ್ಪಟ್ಟ ಇತರ ಕನ್ನಡ ಉಪಭಾಷೆಗಳೆಂದರೆ ನಾಡವ ಕನ್ನಡ, ಮಲೆನಾಡ ಕನ್ನಡ, ಧಾರವಾಡದ ಕನ್ನಡ ಮುಂತಾದುವುಗಳು. ಕನ್ನಡದ ಒಂದು ಉಪಭಾಷೆಯಂತೆಯೇ ತೋರಿಬರುವ ಭಾಷೆಯೆಂದರೆ ಬಡಗ ಭಾಷೆ. ಬಡಗ ಭಾಷೆಯನ್ನು ಬರೆಯಲು ಕನ್ನಡ ಲಿಪಿಯನ್ನು ೧೮೯೦ರಲ್ಲೇ ಉಪಯೋಗಿಸಲಾಗುತ್ತಿತ್ತು. ಬಡಗ ಮಾತ್ರವಲ್ಲದೆ ಕನ್ನಡದೊಂದಿಗೆ ನಿಕಟ ಸಾಮ್ಯವನ್ನು ಹೊಂದಿರುವಂಥ ಭಾಷೆಗಳಾಗಿವೆ ಹೊಲಿಯ ಮತ್ತು ಉರಾಳಿ. ಕನ್ನಡ ಭಾಷೆ ಮತ್ತು ಕನ್ನಡ ಅಂಕೆಗಳ ಬೆಳವಣಿಗೆ 'ಕುಮುದೇಂದು ಮುನಿ' ರಚಿಸಿದ 'ಸಿರಿ ಭೂವಲಯ' ಎಂಬ ಗ್ರಂಥದ ಪ್ರಕಾರ ಕನ್ನಡ ಭಾಷೆ ಒಂದು ಗುಪ್ತಭಾಷೆಯಾಗಿದ್ದಿತು (ಬ್ರಹ್ಮರ್ಷಿ ದೇವರಾತರ ಪ್ರಕಾರ ವೇದಕಾಲದಿಂದ ಕನ್ನಡವೂ ಸೇರಿದಂತೆ ೪ ಗುಪ್ತಭಾಷೆಗಳು ಇದ್ದುವು). ಸೊನ್ನೆಯಿಂದಲೇ ಎಲ್ಲಾ ಅಂಕೆಗಳನ್ನು ಮತ್ತು ಅಕ್ಷರಗಳನ್ನು ಸೃಷ್ಟಿಸಲಾಯಿತು ಮತ್ತು ಕನ್ನಡ ಭಾಷೆಗೆ ವಿಶ್ವದ ಎಲ್ಲಾ ಭಾಷೆಗಳನ್ನು ಅಡಗಿಸಿಕೊಳ್ಳುವ ಶಕ್ತಿ ಇದೆಯೆಂದು 'ಕುಮುದೇಂದು ಮುನಿ' ತನ್ನ ಗ್ರಂಥದಲ್ಲಿ ಸಾಬೀತುಪಡಿಸಿದ್ದಾರೆ. "ಆದಿ ತೀರ್ಥಂಕರ ವೃಷಭದೇವನು ತನ್ನ ಕುಮಾರಿಯಾದ ಬ್ರಾಹ್ಮೀ ಮತ್ತು ಸುಂದರಿಯರಿಗೆ ಕನ್ನಡ ಅಂಕಾಕ್ಷರಗಳನ್ನು ವಿವರಿಸಿದ ಕಾರಣದಿಂದಾಗಿ ಈ ಅಕ್ಷರ ಲಿಪಿಗೆ 'ಬ್ರಾಹ್ಮೀಲಿಪಿ' ಎಂದು ಅಂಕಲಿಪಿಗೆ 'ಸುಂದರಿ ಲಿಪಿ' ಎಂದು ಹೆಸರಾಗಿದೆ. ಈ ವಿಷಯವನ್ನು ಸಿರಿ ಭೂವಲಯವು ಬಹಳ ಸ್ಪಷ್ಟವಾಗಿ ತಿಳಿಸಿದೆ. ಕನ್ನಡ ಭಾಷೆ ಈಗ ವ್ಯಾಪಾರಿ ರಂಗದಲ್ಲೂ ಮುಂಚೂಣಿಯ ಭಾಷೆಯಾಗಿ ಬೆಳೆಯುತ್ತಿದೆ. ಉದಾಹರಣೆಗೆ: ಣಿಚ್ಚವು ಹೊಸದಾಗಿರುವಂಕಾಕ್ಷರ ದಚ್ಚುಗಳೊಳಗೊಂಬತ್ತುಣೊಚ್ಚಿತ್ತು ಬಿನ್ನತ್ತಾಗಿರುತರುವಂಕದ ಅಚ್ಚಕಾವ್ಯಕೆ ಸೊನ್ನೆಯಾದಿಮ್ ನುಣುಪಾದ ಸೊನ್ನೆಯ ಮಧ್ಯದೊಳ್ ಕೂಡಿಸೆ ಗಣಿತರ್ಗೆ ಲೆಕ್ಕವ ತರುವಅಣಿಯಾದ ಸೊನ್ನೆಗೆ ಮಣಿಯುತ ನಾನೀಗ ಗುಣಕರ್ಗೆ ಭೂವಲಯವನು ವರುಷಭಾರತದೊಳು ಬೆಳಗುವೆತ್ತಿಹ ಕಾವ್ಯ ಕರುನಾಡ ಜನರಿಗನಾದಿಅರುಹನಾಗಮದೊಂದಿಗೆ ನಯ ಬರುವಂತೆ ವರಕಾವ್ಯವನ್ನು ಕನ್ನದಿಪೆ ಪುರ ಜಿನನಾಥ ತನ್ನಂಕದೊಳ್ ಬ್ರಾಹ್ಮಿಗೆ ಅರವತ್ನಾಲ್ಕಕ್ಷರವಿತ್ತವರಕುವರಿಯರು ಸೌಂದರಿಗೆ ಒಂಬತ್ತನು ಕರುಣಿಸಿದನು ಸೊನ್ನೆ ಸಹಿತ ಕನ್ನಡದೊಂದೆರಳ್ ಮೂರುನಾಲ್ಕೈದಾರು ಮುನ್ನ ಏಳೆಂಟೊಂಬತೆಂಬಉನ್ನತವಾದಂಕ ಸೊನ್ನೆಯಿಂ ಹುಟ್ಟಿತೆಂದೆನ್ನುವುದನು ಕಲಿಸಿದನು ಸರ್ವಜ್ಞದೇವನು ಸರ್ವಾಂಗದಿಂ ಪೇಳ್ದ ಸರ್ವಸ್ವ ಭಾಷೆಯ ಸರಣಿಗೆಸಕಲವ ಕರ್ಮಾಟದಣುರೂಪ ಹೊಂದುತ ಪ್ರಕಟದ ಓಂದರೋಳ್ ಅಡಗಿ ಹದಿನೆಂಟು ಭಾಷೆಯ ಮಹಾಭಾಷೆಯಾಗಲು ಬದಿಯ ಭಾಷೆಗಳೇಳುನೂರುಹೃದಯದೊಳಡಗಿಸಿ ಕರ್ಮಾಟ ಲಿಪಿಯಾಗಿ ಹುದುಗಿದಂಕ ಭೂವಲಯ ಪರಭಾಷೆಗಳೆಲ್ಲ ಸಂಯೋಗವಾಗಲು ಸರಸ ಶಬ್ದಾಗಮ ಹುಟ್ಟಿಸರವದು ಮಾಲೆಯಾದತಿಶಯ ಹಾರದ ಸರಸ್ವತಿ ಕೊರಳ ಆಭರಣ ಭೌಗೋಳಿಕ ವ್ಯಾಪಕತೆ ಕನ್ನಡ ಭಾಷೆಯನ್ನು ಪ್ರಮುಖವಾಗಿ ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲಾಗುತ್ತಿದೆ ಮತ್ತು ಸ್ವಲ್ಪ ಮಟ್ಟಿಗೆ ಅಕ್ಕಪಕ್ಕದ ರಾಜ್ಯಗಳಲ್ಲಿ (ಕೇರಳ, ಗೋವಾ, ಆಂಧ್ರ, ತಮಿಳುನಾಡು, ಮಹಾರಾಷ್ಟ್ರ ಮತ್ತು ಇತರ) ಸಹ ಉಪಯೋಗಿಸಲಾಗುತ್ತದೆ. ಅಮೆರಿಕದ ಸಂಯುಕ್ತ ಸಂಸ್ಥಾನ, ಇಂಗ್ಲೆಂಡ್ ಮತ್ತು ಕೊಲ್ಲಿ ದೇಶಗಳಲ್ಲಿ ಸಹ ಸಾಕಷ್ಟು ಕನ್ನಡಿಗರ ಜನಸಂಖ್ಯೆ ಇದೆ. ಇವರಲ್ಲಿ ಹೊರದೇಶಗಳಲ್ಲಿ ವಾಸಿಸುತ್ತಿರುವವರು ಉದ್ಯೋಗ ನಿಮಿತ್ತ ಕರ್ನಾಟಕದಿಂದ ವಲಸೆ ಹೋದವರಾಗಿದ್ದಾರೆ. ಇಂದಿಗೆ ಕೇರಳದಲ್ಲಿರುವ ಕಾಸರಗೋಡು ೧೯೫೬ರ ಭಾಷಾವಾರು ಪ್ರಾಂತ್ಯ ವಿಂಗಡಣೆಗಿಂತ ಪೂರ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಭಾಗವಾಗಿತ್ತು. ಅಧಿಕೃತ ಮಾನ್ಯತೆ ಮತ್ತು "ಅಭಿಜಾತ ಭಾಷೆ (ಚೆನ್ನುಡಿ)" ಸಂಸ್ಕೃತಿ ಸಚಿವಾಲಯ ನೇಮಿಸಿದ ಭಾಷಿಕ ನಿಪುಣರು ಶಿಫಾರಸ್ಸುಗಳನ್ನು ಅನುಮೋದಿಸುತ್ತ ಕೇಂದ್ರ ಸರಕಾರ ಕನ್ನಡ ಭಾಷೆಗೆ ಅಭಿಜಾತ ಭಾಷೆ ಎಂಬ ಗೌರವವನ್ನಿತ್ತು ಆದರಿಸಿತು. ಅದಲ್ಲದೆ ಭಾರತದ ಭಾಷೆಗಳಲ್ಲಿ ನಾಲ್ಕನೆಯ ಗೌರವ ಸ್ಥಾನವೂ ಕನ್ನಡಕ್ಕೆ ದೊರೆಯಿತು. ಜುಲೈ 2011ರಲ್ಲಿ ಮೈಸೂರಿನ ಕೇಂದ್ರೀಯ ಭಾರತೀಯ ಭಾಷೆಗಳ ಅಧ್ಯಯನ ಸಂಸ್ಥೆಯಲ್ಲಿ ಅಭಿಜಾತ ಕನ್ನಡದ ಅಧ್ಯಯನಕ್ಕಾಗಿ ಪ್ರತ್ಯೇಕ ಕೇಂದ್ರ ಆರಂಭಗೊಂಡಿತು. ನಿಘಂಟು ಕನ್ನಡದ ಮೊದಲ ಕನ್ನಡ-ಇಂಗ್ಲೀಷ್ ನಿಘಂಟನ್ನು ರಚಿಸಿದವರು ರೆವರೆಂಡ್ ಫರ್ಡಿನಾಂಡ್ ಕಿಟ್ಟೆಲ್. ಈ ನಿಘಂಟು ೭೦,೦೦೦ಕ್ಕೂ ಅಧಿಕ ಕನ್ನಡ ಪದಗಳನ್ನು ಒಳಗೊಂಡಿದೆ. ರೆವರೆಂಡ್ ಫರ್ಡಿನಾಂಡ್ ಕಿಟ್ಟೆಲ್ ಕನ್ನಡ ಭಾಷೆಯ ಮೂರು ಉಪಭಾಷೆಗಳನ್ನೊಳಗೊಂಡ ಪ್ರಧಾನ ವ್ಯಾಕರಣವನ್ನು ವಿವರಿಸುವ ಗ್ರಂಥವೊಂದನ್ನೂ ರಚಿಸಿದ್ದಾರೆ. ಹೊಸಗನ್ನಡ ಕಾಲಘಟ್ಟದಲ್ಲಿ ಮೊದಲ ಕನ್ನಡ-ಕನ್ನಡ ನಿಘಂಟು ರಚಿಸಿದವರು ಪ್ರೊ.ಜಿ.ವೆಂಕಟಸುಬ್ಬಯ್ಯ. ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿದ ೯,೦೦೦ಕ್ಕೂ ಅಧಿಕ ಪುಟಗಳನ್ನೊಳಗೊಂಡ ಈ ನಿಘಂಟು ಒಂಬತ್ತು ಸಂಪುಟಗಳಲ್ಲಿ ಬಿಡುಗಡೆಗೊಂಡಿದೆ. ಪ್ರೊ. ಜಿ. ವೆಂಕಟಸುಬ್ಬಯ್ಯನವರು ಕನ್ನಡ-ಇಂಗ್ಲೀಷ್ ನಿಘಂಟನ್ನೂ ಕ್ಲಿಷ್ಟ ಪದಕೋಶ ಎಂಬ ಕನ್ನಡದ ಕ್ಲಿಷ್ಟ ಪದಗಳನ್ನೊಳಗೊಂಡ ನಿಘಂಟನ್ನೂ ರಚಿಸಿದ್ದಾರೆ. ಕನ್ನಡ ಅಕ್ಷರಮಾಲೆ ಕನ್ನಡ ಅಕ್ಷರಮಾಲೆಯಲ್ಲಿ ೪೯ ಅಕ್ಷರಗಳಿದ್ದು, ಇದು ಒಂದು ಶಾಬ್ದಿಕ ಅಕ್ಷರಮಾಲೆ. ಕನ್ನಡ ಅಕ್ಷರಮಾಲೆಯಲ್ಲಿ ಬರುವ ಅಕ್ಷರಗಳು ಸರಿ ಸುಮಾರು ಎಲ್ಲಾ ಭಾರತೀಯ ಭಾಷೆಗಳಲ್ಲಿ ಬರುತ್ತವೆ. ತೆಲುಗು ಲಿಪಿಗೆ ಕನ್ನಡ ಲಿಪಿಯೊಂದಿಗೆ ನಿಕಟವಾದ ಹೋಲಿಕೆಯಿದೆ ಮತ್ತು ಈ ಎರಡು ಲಿಪಿಗಳ ಮೂಲ ಒಂದೇ ಆಗಿದೆ. ಕನ್ನಡ ಮತ್ತು ತೆಲುಗು ಲಿಪಿಗಳೆರಡೂ ಕದಂಬ ಲಿಪಿಯಿಂದ ರೂಪುಗೊಂಡಂಥವು. ಕನ್ನಡ ಲಿಪಿ ಒತ್ತಕ್ಷರ ಹಾಗೂ ಕಾಗುಣಿತಗಳ ದೆಸೆಯಿಂದ ಸಾಕಷ್ಟು ಸಂಕೀರ್ಣವಾದದ್ದು. ಕನ್ನಡ ಬರವಣಿಗೆಯ ಪ್ರತಿ ಚಿಹ್ನೆ ಒಂದು ಶಾಬ್ದಿಕ ಮಾತ್ರೆಯನ್ನು ಪ್ರತಿನಿಧಿಸುತ್ತದೆ. ಇಂಗ್ಲೀಷಿನಂಥ ಭಾಷೆಗಳಲ್ಲಿ ಒಂದು ಚಿಹ್ನೆ ಒಂದು ಶಬ್ದವನ್ನು ಮಾತ್ರ ಪ್ರತಿನಿಧಿಸುತ್ತದೆ. ಮಾನವನು ತಿಳಿಸಬೇಕಾದ ಅರ್ಥಕ್ಕೆ ಭಾಷೆ ಸಂಕೇತವಾದರೆ, ಭಾಷೆಗೆ ಲಿಪಿ ಸಂಕೇತವಾಗುತ್ತದೆ. ಚಿತ್ರ ಲಿಪಿಯಿಂದ ಹಿಡಿದು ಇಂದಿನ ಮುದ್ರಣ ಮತ್ತು ಕಂಪ್ಯೂಟರ್ ಲಿಪಿಯವರೆಗೆ ಲಿಪಿಗಳು ಬೆಳೆದಿವೆ. ಭಾರತದಲ್ಲಿರುವ ಅನೇಕ ಭಾಷಾಲಿಪಿಗಳಿಗೂ ಅಶೋಕನ ಶಾಸನಗಳಲ್ಲಿ ವ್ಯಾಪಕವಾಗಿ ಬಳಕೆಯಾಗಿರುವ ಬ್ರಾಹ್ಮಿ ಲಿಪಿಯೇ ಮೂಲ. ಕನ್ನಡದ ಅಕ್ಷರ ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಬಗೆಯನ್ನು ವಿಸ್ತೃತ ಅಧ್ಯಯನಗಳು ನಡೆದಿವೆ. ವಿದ್ವಾಂಸರು ಈ ಬಗ್ಗೆ ವರ್ಣಮಾಲೆಯ ಪಟಗಳನ್ನು ರಚಿಸಿ ಶತಮಾನಗಳ ಅಕ್ಷರ ಸ್ವರೂಪಗಳನ್ನು ಗುರುತಿಸಿದ್ದಾರೆ. ಇಂಥ ಅಧ್ಯಯನಗಳ ಸಹಾಯದೊಂದಿಗೆ ಅಕ್ಷರಗಳು ಮಾರ್ಪಟ್ಟ ಬಗೆಯನ್ನು ಕಂಡರಿಯಲು ಸಾಧ್ಯವಿದೆ. ಮುದ್ರಣದ ಆರಂಭದೊಂದಿಗೆ ಕನ್ನಡ ಲಿಪಿಗೆ ಈಗಿನ ರೂಪ ನೆಲೆನಿಂತಿರುವುದು ಗಮನಾರ್ಹ. ಪ್ರಪಂಚದಲ್ಲಿರುವ ೧೮ ಬಗೆಯ ಲಿಪಿಗಳಲ್ಲಿ ೮ ಅಕ್ಷರ ಲಿಪಿಗಳು. ಉಳಿದಂತೆ ಚಿತ್ರಲಿಪಿಯೇ ಮುಂತಾದುವುಗಳನ್ನು ಕಾಣಬಹುದು. ಭಾರತದಲ್ಲಿ ಅನೇಕ ಭಾಷೆಗಳವು ಬ್ರಾಹ್ಮಿಲಿಪಿಯಿಂದ ರೂಪುಗೊಂಡ ಲಿಪಿಗಳಾಗಿವೆ. ಪಾರ್ಸೋ-ಅರಬ್ಬಿ ಲಿಪಿಗಳೂ ಭಾರತದಲ್ಲಿ ರೂಢಿಯಲ್ಲಿವೆ. ಉದಾ: ಉರ್ದು, ಕಾಶ್ಮೀರಿ ಮತ್ತು ಪುಷ್ತು. ಕನ್ನಡ ವರ್ಣಮಾಲೆಯಲ್ಲಿ ಇರುವ ಲಿಪಿ ಸಂಜ್ಞೆಗಳು ಇವು: ಹೀಗೆ ಒಟ್ಟು ೪೯ ವರ್ಣಗಳು ಕನ್ನಡದಲ್ಲಿರುವಂಥವು. ವರ್ಣ ವಿಂಗಡಣೆ ವಿಭಜಿಸಲು ಸಾಧ್ಯವಿಲ್ಲದ ಧ್ವನಿಯನ್ನು ವರ್ಣವೆನ್ನಲಾಗುತ್ತದೆ ಮತ್ತು ಭಾಷೆಯ ಅತ್ಯಂತ ಕಿರಿಯ ಅಂಶವನ್ನು ಸ್ವರವೆಂದು ಕರೆಯಲಾಗುತ್ತದೆ. (ಉದಾಃ ವಸ್ತ್ರ = ವ್+ಅ+ಸ್+ತ್+ರ್+ಅ) ಸ್ವತಂತ್ರವಾಗಿ ಉಚ್ಚರಿಸಬಹುದಾದ ವರ್ಣಗಳನ್ನು ಸ್ವರಗಳೆಂದೂ ಇತರ ವರ್ಣಗಳ ಸಹಾಯದಿಂದ ಉಚ್ಚರಿಸಬಹುದಾದ ವರ್ಣಗಳನ್ನೂ ವ್ಯಂಜನಗಳೆಂದೂ ಕರೆಯಲಾಗುತ್ತದೆ. ಸ್ವರಗಳ ವಿಧಗಳು ಸ್ವರಗಳನ್ನು ಅವುಗಳ ಉಚ್ಚಾರಣೆಗೆ ತೆಗೆದುಕೊಳ್ಳುವ ಕಾಲಾವಧಿಯನ್ನು ಅವಲಂಬಿಸಿ ಹ್ರಸ್ವಸ್ವರಗಳು, ಮತ್ತು ದೀರ್ಘಸ್ವರಗಳು ಎಂದು ಎರಡು ಗುಂಪುಗಳನ್ನಾಗಿ ಮಾಡಲಾಗಿದೆ. ಹ್ರಸ್ವ ಸ್ವರವನ್ನು ಉಚ್ಚರಿಸಲು ಬೇಕಾದ ಕಾಲವನ್ನು ಛಂದಸ್ಸಿನಲ್ಲಿ ಒಂದು ಮಾತ್ರೆಯ ಕಾಲ ಎಂದು ಕರೆಯಲಾಗಿದೆ. ಉದಾಹರಣೆಗೆ: ಅ, ಇ, ಉ, ಋ, ಎ, ಒ. ದೀರ್ಘಸ್ವರಗಳ ಉಚ್ಚಾರಣೆಗೆ ಎರಡು ಮಾತ್ರೆಗಳ ಕಾಲವನ್ನು ತೆಗೆದುಕೊಳ್ಳುತ್ತೇವೆ. ಉದಾಹರಣೆಗೆ: ಆ, ಈ, ಊ, ೠ, ಏ, ಐ, ಓ, ಔ. "ಋ"ಕಾರವನ್ನು ಸಂಸ್ಕೃತದಿಂದ ಕನ್ನಡಕ್ಕೆ ಬಂದಿರುವ ಪದಗಳಲ್ಲಿ ಮಾತ್ರ ಕಾಣುತ್ತೇವೆ. ಉದಾಹರಣೆಗೆ: ಋಷಿ, ಋಜುವಾತು, ಋಣ, ಋತುಮಾನ. "ಐ" ಮತ್ತು "ಔ"ಗಳ ಸ್ವರೂಪ: ಮೇಲಿನ ವರ್ಣಗಳು ಎರಡು ವಿಭಿನ್ನ ಸ್ವರಗಳ ಸಂಯೋಗದಿಂದ ಉಂಟಾಗುತ್ತವೆ. ಅ ಮತ್ತು ಇ ಸ್ವರಗಳ ಸಂಧಿಯಲ್ಲಿ "ಐ"ಕಾರವು ಉಂಟಾಗಿದ್ದು, ಅ ಮತ್ತು ಉ ಸ್ವರಗಳಿಂದ "ಔ"ಕಾರವು ಜನಿಸಿದೆ. ಈ ಎರಡು ಸ್ವರಗಳು ವಿಜಾತೀಯ ಸ್ವರಗಳ ಸಂಧಿಯಿಂದ ಆಗಿದ್ದು, ತಮ್ಮ ದೀರ್ಘ ಸ್ವರೂಪದಿಂದಲಾಗಿ ದೀರ್ಘಸ್ವರಗಳ ಪಟ್ಟಿಗೆ ಸೇರುತ್ತವೆ. ವ್ಯಂಜನದ ವಿಧಗಳು ವ್ಯಂಜನಗಳನ್ನು ಉಚ್ಚಾರಣೆಯ ಆಧಾರದ ಮೇಲೆ "ಕ್"ನಿಂದ "ಮ್"ಕಾರದ ವರೆಗಿನ ಇಪ್ಪತ್ತೈದು ವರ್ಣಗಳನ್ನು ವರ್ಗೀಯ ವ್ಯಂಜನಗಳೆಂದು ಕರೆಯುತ್ತೇವೆ. ಕ ಖ ಗ ಘ ಙ; ಚ ಛ ಜ ಝ ಞ; ಟ ಠ ಡ ಢ ಣ; ತ ಥ ದ ಧ ನ; ಪ ಫ ಬ ಭ ಮ. "ಯ" ಕಾರದಿಂದ "ಳ" ಕಾರದ ವರೆಗಿನ ವ್ಯಂಜನಗಳನ್ನು ಅವರ್ಗೀಯ ವ್ಯಂಜನಗಳೆನ್ನುತ್ತೇವೆ. ಯ ರ ಲ ವ ಶ ಷ ಸ ಹ ಳ. ಲಿಪ್ಯಂತರಣ ಕನ್ನಡ ಅಕ್ಷರಗಳನ್ನು ಗಣಕಯಂತ್ರದಲ್ಲಿ ಸಾಮಾನ್ಯ ಕೀಲಿಮಣೆಯ ಮೂಲಕ ಮೂಡಿಸಲು ಅನೇಕ ಲಿಪ್ಯಂತರಣ ವಿಧಾನಗಳಿವೆ. ಇವುಗಳಲ್ಲಿ ಕೆಲವೆಂದರೆ INSCRIPT, ITRANS, ಬರಹ ಮತ್ತು ನುಡಿ. ಕರ್ನಾಟಕ ಸರ್ಕಾರದ ಅಧಿಕೃತ ಲಿಪ್ಯಂತರಣ ವಿಧಾನ ನುಡಿ. INSCRIPT ಶಿಷ್ಟಾಚಾರವನ್ನು ವಿಂಡೋಸ್ ಹಾಗೆಯೇ GNOME ಬಳಸುವ ಎಲ್ಲಾ ಕಾರ್ಯಾಚರಣೆ ವ್ಯವಸ್ಥೆಗಳೂ ಗುರುತು ಹಿಡಿಯುತ್ತವೆ.ಇದನ್ನು ಸಿದ್ಧಪಡಿಸಿಕೊಟ್ಟವರು ಕೆ. ಪಿ. ರಾವ್ರವರು. ಕನ್ನಡ ಅಂಕೆಗಳು ಕನ್ನಡ ಅಂಕೆಗಳನ್ನು ಈ ಕೆಳಗಿನ ಪಟ್ಟಿಯಲ್ಲಿ ಕಾಣುವಂತೆ ಗುರುತಿಸಲಾಗುತ್ತದೆ. ಚಿತ್ರಸಂಚಯ ಕ್ರಿ.ಶ.370–450ರ ಅವಧಿಯ ಹಿರಿತನ ತಂದ ಕನ್ನಡ ಶಾಸನ ಹಲ್ಮಿಡಿಯ ಶಾಸನವನ್ನು ಇದುವರೆಗೂ ಕನ್ನಡದ ಪ್ರಾಚೀನ ಶಾಸನವೆನ್ನಲಾಗುತ್ತಿತ್ತು. ಆದರೆ ಕೇಂದ್ರ ಪುರಾತತ್ವ ಇಲಾಖೆ ಹಲ್ಮಿಡಿಗಿಂತಲೂ ಹಳೆಯದಾದ ಶಾಸನವನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಹತ್ತಿರದ ತಾಳಗುಂದಲ್ಲಿ ಪತ್ತೆ ಹಚ್ಚಲಾಗಿದೆ.ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಾಳಗುಂದದಲ್ಲಿ ಈಚೆಗೆ ಸಿಕ್ಕಿರುವ ಶಾಸನಗಳು ಕನ್ನಡದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿವೆ. ಪುರಾತತ್ವ ಇಲಾಖೆಯ ಇಲಾಖೆಯು ನಿವೃತ್ತ ಅಧೀಕ್ಷಕ ಟಿ.ಎಂ. ಕೇಶವ ಅವರ ನೇತೃತ್ವದಲ್ಲಿ ಅಧ್ಯಯನ ನಡೆಸಿ, ಮೊದಲ ಬಾರಿಗೆ 2012–13ರಲ್ಲಿ ಪ್ರಾಯೋಗಿಕ ಉತ್ಖನನ ಪ್ರಾರಂಭಿಸಿತು. ಈ ಸಂದರ್ಭದಲ್ಲಿ ಗಂಗರ ಭೂ ವಿಕ್ರಮ (ಕ್ರಿ. ಶ. 630–670) ಕಾಲದ 13 ಚಿನ್ನದ ಆನೆ ವರಹ ಹಾಗೂ ಒಂದು ವಿಜಯನಗರ/ಕೆಳದಿ ಅರಸರ ನಾಣ್ಯ ಪತ್ತೆಯಾಯಿತು. ಕಲಚೂರಿ ಕಾಲದ ತಾಮ್ರದ ತಟ್ಟೆಗಳು, ಸಾವಿರಾರು ವರ್ಷದ ಹಿಂದಿನ ಪೂಜಾ ಸಾಮಗ್ರಿಗಳು, ಮಣ್ಣಿನ ಹಣತೆ ಲಭಿಸಿದವು. ಈ ಗ್ರಾಮವು ಶಿರಾಳಕೊಪ್ಪದಿಂದ ಆರು ಕಿ.ಮೀ. ಅಂತರದಲ್ಲಿದೆ. ಕನ್ನಡದ ಮೂಲ ಬೇರುಗಳು ಇಲ್ಲಿಂದಲೇ ಟಿಸಿಲೊಡೆದು ಜಗತ್ತಿನಾದ್ಯಂತ ಹಬ್ಬಿವೆ. ಕನ್ನಡದ ಪ್ರಥಮ ದೊರೆ ಮಯೂರ ವರ್ಮನ ಜನ್ಮಸ್ಥಳವಾಗಿರುವ ತಾಳಗುಂದ ಹಲವು ಪ್ರಥಮಗಳ ಮುಕುಟವನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಪ್ರಥಮ ಸಾಮ್ರಾಜ್ಯ ಎನಿಸಿರುವ ಕದಂಬ ಸಾಮ್ರಾಜ್ಯ ಸ್ಥಾಪನೆ, ಪ್ರಾಚೀನ ಶಿವಲಿಂಗ, ಕೆರೆ, ಶಿಲಾಶಾಸನ, ಕನ್ನಡ ಶಾಲೆ, ವಿಶ್ವವಿದ್ಯಾಲಯ ಸೇರಿದಂತೆ ಕನ್ನಡ ನಾಡಿನ ಹಲವಾರು ಪ್ರಥಮಗಳು ತಾಳಗುಂದ ಗ್ರಾಮದಲ್ಲಿ ನಿರ್ಮಾಣವಾಗಿವೆ. ಈಗ ಆ ಗುಂಪಿಗೆ ಕರ್ನಾಟಕದ ಪ್ರಾಚೀನ ಕನ್ನಡ ಶಾಸನ ಪತ್ತೆಯಾಗಿ ಸೇರ್ಪಡೆಯಾಗಿದೆ. ಈ ಶಾಸನವನ್ನು 2014ರಲ್ಲಿಯೇ ಪತ್ತೆ ಹಚ್ಚಲಾಗಿತ್ತು. ಹಲವಾರು ಅಧ್ಯಯನಗಳ ನಂತರ ಈ ಶಾಸನವು ಕ್ರಿ. ಶ. 370–450ರ ಅವಧಿಯದು ಎಂದು ಕಳೆದ ಡಿಸೆಂಬರ್‌ನಲ್ಲಿ ಪುರಾತತ್ವ ಇಲಾಖೆ ಪ್ರಕಟಿಸಿದೆ. ಇಲಾಖೆ 2013–14ರಲ್ಲಿ ಮತ್ತೆ ಪ್ರಾಯೋಗಿಕ ಉತ್ಖನನ ನಡೆಸಿತು. ಆಗ ಒಂದು ಸಿಂಹಕಟಾಂಜನ (ಶಾಸನ) ಲಭ್ಯವಾಯಿತು. ಅದರಲ್ಲಿ ವಜಿನಾಗ(ಯ್ಯ) ಎಂಬ ಅಂಬಿಗನಿಗೆ ಭೂಮಿಯನ್ನು ಉಡುಗೊರೆಯಾಗಿ ನೀಡಿದ ಬಗ್ಗೆ ಬೆಳಕು ಚೆಲ್ಲುತ್ತದೆ ಎಂದು ಪುರಾತತ್ವ ಇಲಾಖೆ ಪ್ರಕಟಿಸಿದೆ. ಈ ಶಾಸನದಲ್ಲಿ ತುಂಡರಿಸಿದ ಏಳು ಸಾಲುಗಳಿವೆ. "ಕೊಟ್ಟಾರ್, ನಾಲ್ಕು, ಬೊಯ್ಗರಾ, ನಾಗಣ, ಪುಲಿಂದಿಗೆ, ಕೊಳ್ಳೆ" ಎಂಬ ಕನ್ನಡ ಶಬ್ದಗಳು ಸೇರಿದಂತೆ ಸಂಸ್ಕೃತ ಹಾಗೂ ಕನ್ನಡ ಶಬ್ದಗಳನ್ನು ಬಳಸಲಾಗಿದೆ. ನೋಡಿ ವಿಕಿಪೀಡಿಯ:ಯೋಜನೆ/ಕನ್ನಡ ಸಾಹಿತ್ಯ ಚರಿತ್ರೆ ಅಪೂರ್ಣವಾಗಿದೆ. ಆಧುನಿಕ ಕನ್ನಡ ಕಾವ್ಯದ ಬೆಳವಣಿಗೆ ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕನ್ನಡದಲ್ಲಿ ನವ್ಯಕಾವ್ಯ ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಗೋಪಾಲಕೃಷ್ಣ ಅಡಿಗ, ಎಂ ಹೆಚ್ಚಿಗೆ ಓದಲು ನೋಡಿ ಕನ್ನಡ ಸಾಹಿತ್ಯ ಕನ್ನಡ ವ್ಯಾಕರಣ ಭಾರತೀಯ ಭಾಷೆಗಳು ದ್ರಾವಿಡ ಭಾಷೆಗಳು ಸಮುಚ್ಚಯ ಪದಗಳು ಕನ್ನಡ ಅಕ್ಷರಮಾಲೆ ಬ್ರಾಹ್ಮಿ ಲಿಪಿ ಕರ್ನಾಟಕ ಕನ್ನಡ ವಿಕಿಯಲ್ಲಿ ಕನ್ನಡ ಟೈಪಿಂಗ್ ಬಾಹ್ಯ ಸಂಪರ್ಕಗಳು ಪ್ರಾಕೃತ, ಸಂಸ್ಕೃತ, ಕನ್ನಡ : ಆರಂಭಕಾಲದ ಭಾಷಾಬಾಂಧವ್ಯ:ಭಾಷೆಗಳ ಬಳ್ಳಿ ಮತ್ತು ಅಕ್ಷರಸಮಾಜ;ಷ. ಶೆಟ್ಟರ್;5 Feb, 2017 ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಇತಿಹಾಸ ಕನ್ನಡ ಅಕ್ಷರಗಳಿಗೆ ಅಧಿಕೃತವಾದ ಯೂನಿಕೋಡ್ ಪಟ್ಟಿ ಕನ್ನಡ ಭಾಷೆಯಲ್ಲಿ ಗಣಕೀಕರಣದ ವಿವರಗಳು ಕನ್ನಡ ಕನ್ನಡ ಕಲಿಯಿರಿ (Learn Kannada) ಕನ್ನಡ ಬರುತ್ತೆ (Learn spoken Kannada) ಕನ್ನಡ ಲಿಪಿಯ ವಿಕಾಸ ಕನ್ನಡ ಸಾಹಿತ್ಯ ಪರಿಷತ್ತು: ಕನ್ನಡವೆಂಬ ಜ್ಞಾನದ ಭಾಷೆ; ಜಿ.ಎನ್ ದೇವಿ; ೨೮-೧೦-೨೦೧೮ [alvasnudisiri.com/media/press-release]ಭಾಷಣ | ಪ್ರೊ. ಟಿ.ವಿ. ವೆಂಕಟಾಚಲ ಶಾಸ್ತ್ರೀಅಧ್ಯಕ್ಷರ ಭಾಷಣ Robert Zydenbos: A Manual of Modern Kannada. Heidelberg 2020 (Open Access: PDF-ರೂಪದಲ್ಲಿ) ಉಲ್ಲೇಖಗಳು ಭಾರತೀಯ ಭಾಷೆಗಳು ದ್ರಾವಿಡ ಭಾಷೆಗಳು ಕನ್ನಡ ಕರ್ನಾಟಕ
921
https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1%20%E0%B2%B8%E0%B2%BE%E0%B2%B9%E0%B2%BF%E0%B2%A4%E0%B3%8D%E0%B2%AF
ಕನ್ನಡ ಸಾಹಿತ್ಯ
ಇತಿವೃತ್ತ ಕನ್ನಡ ಬರವಣಿಗೆಯ ಪ್ರಪ್ರಥಮ ಉದಾಹರಣೆ ದೊರಕಿರುವುದು ತಾಳಗುಂದದ ಸಿಂಹಕಟಾಂಜನ ಶಾಸನ ದಲ್ಲಿ (ಸು. ಕ್ರಿ.ಶ೩೭೦ ರಿಂದ೪೫೦). ಪ್ರಸಿದ್ಧವಾದ ಬಾದಾಮಿ ಶಾಸನಗಳು ಪುರಾತನ ಕನ್ನಡ ಬರವಣಿಗೆಯ ಮತ್ತಷ್ಟು ಉದಾಹರಣೆಗಳನ್ನು ನೀಡುತ್ತವೆ. ಉಪಲಬ್ಧವಾಗಿರುವ ಪ್ರಥಮ ಕನ್ನಡ ಪುಸ್ತಕವೆಂದರೆ ೯ ನೇ ಶತಮಾನದ ಅಮೋಘವರ್ಷ ನೃಪತುಂಗನ [[ಕವಿರಾಜಮಾರ್ಗ] ನೃಪತುಂಗನ ಆಸ್ಥಾನದ ಕವಿಯಾಗಿದ್ದ ಶ್ರೀವಿಜಯನ ಈ ಪುಸ್ತಕ ಕನ್ನಡ ಕಾವ್ಯ, ಕನ್ನಡ ನಾಡು, ಮತ್ತು ಕನ್ನಡಿಗರ ಬಗ್ಗೆ ಬರೆಯಲ್ಪಟ್ಟ ಒಟ್ಟಾರೆ ಸಾರಾಂಶವೆನ್ನಬಹುದು. ಇದಕ್ಕೆ ಹಿಂದೆ ಬರೆಯಲ್ಪಟ್ಟ ಕೆಲವು ಕನ್ನಡ ಪುಸ್ತಕಗಳ ಉಲ್ಲೇಖ ಈ ಪುಸ್ತಕದಲ್ಲಿ ಬಂದಿರುವ ಆಧಾರದ ಮೇಲೆ ಕನ್ನಡ ಸಾಹಿತ್ಯದ ಉಗಮ ಸುಮಾರು ಕ್ರಿ.ಶ. ೬-೭ನೇ ಶತಮಾನಗಳಲ್ಲಿ ಆದದ್ದಿರಬಹುದು. ಆದರೆ ಕವಿರಾಜಮಾರ್ಗದ ಹಿಂದಿನ ಯಾವ ಕೃತಿಗಳೂ ಇದುವರೆಗೆ ದೊರಕಿಲ್ಲ. ಕನ್ನಡ ಸಾಹಿತ್ಯದ ಚರಿತ್ರೆಯನ್ನು ಮೂರು ಘಟ್ಟಗಳಾಗಿ ವಿಂಗಡಿಸ ಬಹುದು: ಹಳೆಗನ್ನಡ, ನಡುಗನ್ನಡ ಹಾಗೂ ಆಧುನಿಕ ಕನ್ನಡ. ಹಳೆಗನ್ನಡ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹತ್ತನೇ ಶತಮಾನದಿಂದ ಸುಮಾರು ಹನ್ನೆರಡನೇ ಶತಮಾನದ ವರೆಗಿನ ಕಾಲಘಟ್ಟವನ್ನು ಹಳೆಗನ್ನಡ ಎಂದು ಗುರುತಿಸಬಹುದು. ಈ ಕಾಲದ ಸಾಹಿತ್ಯ ಮುಖ್ಯವಾಗಿ ಜೈನ ಧರ್ಮವನ್ನು ಅವಲಂಬಿಸಿದೆ. ಕನ್ನಡ ಚರಿತ್ರೆಯ ಈ ಘಟ್ಟಕ್ಕೆ ಆದಿ-ಕಾವ್ಯ ಎಂದೂ ಸಹ ಕರೆಯಬಹುದು. ಈ ಕಾಲದ ಅತಿ ಪ್ರಸಿದ್ಧ ಕವಿಯೆಂದರೆ ಪಂಪ (ಕ್ರಿ.ಶ. ೯೦೨-೯೭೫). ಪಂಪನ ವಿಕ್ರಮಾರ್ಜುನ ವಿಜಯ ಅಥವಾ ಪಂಪ ಭಾರತ ಇಂದಿಗೂ ಮೇರು ಕೃತಿಯೆಂದು ಪರಿಗಣಿತವಾಗಿದೆ. ಪಂಪ ಭಾರತ ಮತ್ತು ತನ್ನ ಇನ್ನೊಂದು ಮುಖ್ಯಕೃತಿಯಾದ ಆದಿಪುರಾಣದ ಮೂಲಕ ಪಂಪ ಕನ್ನಡ ಕಾವ್ಯಪರಂಪರೆಯ ದಿಗ್ಗಜರಲ್ಲಿ ಒಬ್ಬನಾಗಿದ್ದಾನೆ. ಪಂಪ ಭಾರತ ಸಂಸ್ಕೃತ ಮಹಾಭಾರತದ ಕನ್ನಡ ರೂಪಾಂತರ. ತನ್ನ ಮಾನವತಾವಾದ ಹಾಗೂ ಗಂಭೀರ ಲೇಖನಶೈಲಿಯ ಮೂಲಕ ಕನ್ನಡದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾಗಿದ್ದಾನೆ.' ಮಾನವ ಕುಲ ತಾನೊಂದೇ ವಲಂ' ಎಂದು ವಿಶ್ವಮಾನವ ತತ್ವವನ್ನು ಸಾರಿದ ಜಗದ ಕವಿ ಪಂಪ. ಇದೇ ಕಾಲದ ಇನ್ನೊಬ್ಬ ಪ್ರಮುಖ ಲೇಖಕನೆಂದರೆ ಶಾಂತಿನಾಥ ಪುರಾಣವನ್ನು ರಚಿಸಿದ ಪೊನ್ನ (೯೩೯-೯೬೬). ಈ ಕಾಲದ ಮತ್ತೊಬ್ಬ ಹೆಸರಾಂತ ಕವಿ ರನ್ನ (೯೪೯-?). ರನ್ನನ ಪ್ರಮುಖ ಕೃತಿಗಳು ಜೈನ ಧರ್ಮೀಯವಾದ ಅಜಿತ ತೀರ್ಥಂಕರ ಪುರಾಣ ಮತ್ತು ಗದಾಯುದ್ಧಂ ಅಥವಾ ಸಾಹಸಭೀಮ ವಿಜಯ. ಇದು ಇಡೀ ಮಹಾಭಾರತದ ಒಂದು ಸಿಂಹಾವಲೋಕನ ದೃಷ್ಟಿ. ಮಹಾಭಾರತ ಯುದ್ಧದ ಕೊನೆಯ ದಿನದಲ್ಲಿ ಸ್ಥಿತವಾಗಿದ್ದರೂ ಸಿಂಹಾವಲೋಕನ ಕ್ರಮದಲ್ಲಿ ಇಡಿಯ ಮಹಾಭಾರತವನ್ನು ಪರಿಶೀಲಿಸುತ್ತದೆ. ಛಂದಸ್ಸಿನ ದೃಷ್ಟಿಯಿಂದ ಈ ಕಾಲದ ಕಾವ್ಯ ಚಂಪೂ ಶೈಲಿಯಲ್ಲಿದೆ (ಒಂದು ರೀತಿಯ ಗದ್ಯ ಮಿಶ್ರಿತ ಪದ್ಯ) ನಡುಗನ್ನಡ ನಡುಗನ್ನಡ ಸಾಹಿತ್ಯದಲ್ಲಿ ಅನೇಕ ಹೊಸ ಸಾಹಿತ್ಯ ಪ್ರಕಾರಗಳು ಬೆಳಕಿಗೆ ಬಂದವು. ಇವುಗಳಲ್ಲಿ ಮುಖ್ಯವಾದವು ರಗಳೆ, ಸಾಂಗತ್ಯ ಮತ್ತು ದೇಸಿ. ಈ ಕಾಲದ ಸಾಹಿತ್ಯ ಜೈನ, ಹಿಂದೂ ಹಾಗೂ ಜಾತ್ಯತೀತ ಬೋಧನೆಗಳ ಮೇಲೆ ಆಧಾರಿತವಾಗಿದೆ. ಈ ಘಟ್ಟದ ಪ್ರಮುಖ ಲೇಖಕರಲ್ಲಿ ಇಬ್ಬರೆಂದರೆ ಹರಿಹರ ಮತ್ತು ರಾಘವಾಂಕ. ಇಬ್ಬರೂ ತಮ್ಮದೇ ಶೈಲಿಯಲ್ಲಿ ಕನ್ನಡ ಸಾಹಿತ್ಯದ ದಾರಿಯನ್ನು ಬೆಳಗಿದವರು. ಹರಿಹರ ರಗಳೆ ಸಾಹಿತ್ಯವನ್ನು ಬಳಕೆಗೆ ತಂದನು, ತನ್ನ ಶೈವ ಮತ್ತು ವೀರಶೈವ ಕೃತಿಗಳ ಮೂಲಕ. ರಾಘವಾಂಕ ತನ್ನ ಆರು ಕೃತಿಗಳ ಮೂಲಕ ಷಟ್ಪದಿ ಛಂದಸ್ಸನ್ನು ಜನಪ್ರಿಯಗೊಳಿಸಿದನು. ಅವನ ಮುಖ್ಯ ಕೃತಿ ಹರಿಶ್ಚಂದ್ರ ಕಾವ್ಯ, ಪೌರಾಣಿಕ ಪಾತ್ರವಾದ ಹರಿಶ್ಚಂದ್ರನ ಜೀವನವನ್ನು ಕುರಿತದ್ದು. ಈ ಕೃತಿ ಸಹ ತನ್ನ ತೀವ್ರವಾದ ಮಾನವತಾವಾದಕ್ಕೆ ಪ್ರಸಿದ್ಧವಾಗಿದೆ. ಇದೇ ಕಾಲದ ಇನ್ನೊಬ್ಬ ಪ್ರಸಿದ್ಧ ಜೈನ ಕವಿ ಜನ್ನ. ತನ್ನ ಕೃತಿಗಳಾದ ಯಶೋಧರ ಚರಿತೆ ಮತ್ತು ಅನಂಥನಾಥ ಪುರಾಣಗಳ ಮೂಲಕ ಜೈನ ಸಂಪ್ರದಾಯದ ಬಗ್ಗೆ ಬರೆದನು. ಇದೇ ಕಾಲದ ಕನ್ನಡ ವ್ಯಾಕರಣದ ಬಗೆಗಿನ ಮುಖ್ಯ ಕೃತಿ ಕೇಶಿರಾಜನ ಶಬ್ದಮಣಿದರ್ಪಣ. ವಚನ ಸಾಹಿತ್ಯ ವಚನಗಳು ಎಂದು ಸಾಮಾನ್ಯವಾಗಿ ಕರೆಯಲಾಗುವ ಲಿಂಗಾಯತ ಶರಣರ ವಚನಗಳು ಮುಕ್ತ ಛಂದಸ್ಸಿನಲ್ಲಿವೆ. ಬಸವೇಶ್ವರ, ಅಕ್ಕಮಹಾದೇವಿ ಮೊದಲಾದವರ ವಚನಗಳನ್ನು ಶಾಸ್ತ್ರೀಯ ಸಂಗೀತದಲ್ಲಿ ಅಳವಡಿಸಿ ಮಲ್ಲಿಕಾರ್ಜುನ ಮನಸೂರ ಮೊದಲಾದ ಹಿಂದುಸ್ತಾನಿ ಸಂಗೀತ ಕಾರರು ಹಾಡಿದ್ದಾರೆ. ಶರಣರ ನಂತರದ ಕವಿಯಾದ ಸರ್ವಜ್ಞರ ವಚನಗಳು ಮಾತ್ರ ತ್ರಿಪದಿಯಲ್ಲಿವೆ. ವಚನಗಳು ಅಂದಿನ ಕಾಲದ ಸಾಮಾಜಿಕ, ಧಾರ್ಮಿಕ ಮತ್ತು ಆರ್ಥಿಕ ಪರಿಸ್ಥಿತಿಗಳ ಬಗೆಗಿನ ಯೋಚನಾಧಾರೆಗಳು. ಇನ್ನೂ ಮುಖ್ಯವಾಗಿ, ವಚನ ಸಾಹಿತ್ಯ ಅಂದಿನ ಸಾಮಾಜಿಕ ಕ್ರಾಂತಿಯ ಪ್ರಕ್ರಿಯೆಗೆ ಕನ್ನಡಿ ಹಿಡಿಯುತ್ತದೆ. ಬಸವಣ್ಣನವರಿಂದ ಆರಂಭವಾದ ಈ ಕ್ರಾಂತಿ ಜಾತಿ, ಮತ, ಧರ್ಮಗಳ ಯೋಚನೆಗಳ ಕ್ರಾಂತಿಕಾರಿ ಮರು-ಪರಿಶೀಲನೆಗೆ ದಾರಿ ಮಾಡಿಕೊಟ್ಟಿತು. ವಚನ ಸಾಹಿತ್ಯದಿಂದ ಬಂದ ಮುಖ್ಯ ಬೋಧನೆಗಳೆಂದರೆ ಕಾಯಕವೇ ಕೈಲಾಸ ಮತ್ತು ಅಧ್ಯಾತ್ಮಿಕತೆಯ ಬಗ್ಗೆ ಹೊಸ ನೋಟ. ವಚನ ಸಾಹಿತ್ಯದ ಪ್ರಮುಖ ಹರಿಕಾರರೆಂದರೆ ಬಸವೇಶ್ವರ (೧೧೩೪-೧೧೯೬), ಅಲ್ಲಮಪ್ರಭು ಮತ್ತು ಕನ್ನಡದ ಮೊದಲ ಮಹಿಳಾ ಲೇಖಕಿಯಾದ ಅಕ್ಕ ಮಹಾದೇವಿ (೧೨ನೇ ಶತಮಾನ). ಇವರಲ್ಲದೆ ದೇವರ ದಾಸಿಮಯ್ಯ, ಅಂಬಿಗರ ಚೌಡಯ್ಯ ಇನ್ನೂ ಮೊದಲಾದ ವಚನಕಾರರು ವಚನ ಸಾಹಿತ್ಯಕ್ಕೆ ಉತ್ತಮ ಕಾಣಿಕೆ ನೀಡಿದ್ದಾರೆ. ಕುಮಾರವ್ಯಾಸ ಕುಮಾರವ್ಯಾಸ ಪ್ರಾಯಶಃ ಕನ್ನಡದ ಅತ್ಯಂತ ಪ್ರಸಿದ್ಧ ಹಾಗೂ ಅತ್ಯಂತ ಪ್ರಭಾವಶಾಲಿ ಕವಿ ಎಂದರೂ ಸರಿ. ಅವನ ಜೀವನಕೃತಿ ಕರ್ಣಾಟ ಭಾರತ ಕಥಾಮಂಜರಿ. ಇದು ಮಹಾಭಾರತದ ಮೊದಲ ಹತ್ತು ಪರ್ವಗಳನ್ನು ಅತ್ಯದ್ಭುತ ಶೈಲಿಯಲ್ಲಿ ಭಾಮಿನಿ ಷಟ್ಪದಿಯಲ್ಲಿ ರಚಿಸಿದ್ದಾನೆ. ಅದು ಕೇವಲ ರೂಪಾಂತರವಲ್ಲ ; ಅನೇಕ ಕವಿ ಸಮಯ ದಿಂದ ಕೂಡಿದ್ದು, ಸ್ವಂತ ಕೃತಿಯೆಂಬಂತೆ ರಚಿಸಿದ್ದಾನೆ . ಈ ಕೃತಿ ಕನ್ನಡ ಸಾಹಿತ್ಯದಲ್ಲಿ ಅತಿ ಹೆಚ್ಚು ಮಾನ್ಯತೆ ಪಡೆದ ಕೃತಿಯಿದ್ದೀತು. ಇದರ ಪ್ರಸಿದ್ಧಿಗೆ ಪ್ರಮುಖ ಕಾರಣ ಇದು ಎಲ್ಲ ಕಾಲಗಳಲ್ಲಿಯೂ ಎಲ್ಲ ಬುದ್ಧಿಮತ್ತೆಯ ಜನರಿಗೂ ಸಹ ಅವರವರ ಶಕ್ತಿಗನುಸಾರವಾಗಿ ನಿಲುಕಿದೆ. ಇಡೀ ಕಾವ್ಯ ಭಾಮಿನೀ ಷಟ್ಪದಿ ಛಂದಸ್ಸಿನಲ್ಲಿ ರಚಿಸಲ್ಪಟ್ಟಿದೆ. ಕುಮಾರವ್ಯಾಸ ಹುಡುಕಿ ನೋಡುವ ಮಾನವ ಭಾವಗಳ ವ್ಯಾಪ್ತಿ, ಆತನ ಕಾವ್ಯದ ವೈವಿಧ್ಯತೆ ಮತ್ತು ಶಬ್ದಭಂಡಾರ ಓದುಗರನ್ನು ಬೆರಗುಗೊಳಿಸುತ್ತವೆ. ಕುಮಾರವ್ಯಾಸ ಎಲ್ಲಕ್ಕಿಂತ ಹೆಚ್ಚಾಗಿ ತನ್ನ ರೂಪಕಾಲಂಕಾರ ಚಮತ್ಕಾರಕ್ಕೆ ಪ್ರಸಿದ್ಧನಾಗಿದ್ದಾನೆ. ಇದರಿಂದಾಗಿಯೇ ರೂಪಕ ಸಾಮ್ರಾಜ್ಯ ಚಕ್ರವರ್ತಿ ಎಂಬ ಬಿರುದಿಗೂ ಪಾತ್ರನಾಗಿದ್ದಾನೆ. ಕುಮಾರವ್ಯಾಸನು ಗದುಗಿನ ವೀರನಾರಾಯಣನ ಭಕ್ತ, ಅವನನ್ನು ಗದುಗಿನ ನಾರಣಪ್ಪ ಎಂದು ಕರೆಯುತ್ತಾರೆ. ಈತನ ಮೊದಲಿನ ಹೆಸರು ನಾರಯಣಪ್ಪ . ಕುವೆಂಪುರವರು ಕುಮಾರವ್ಯಾಸನನ್ನು ಕುರಿತು, ಕುಮಾರವ್ಯಾಸನು ಹಾಡಿದನೆಂದರೆ ಕಲಿಯುಗ ದ್ವಾಪರವಾಗುವುದು ಭಾರತ ಕಣ್ಣಲಿ ಕುಣಿಯುವುದು . ಮೈಯಲಿ ಮಿಂಚಿನ ಹೊಳೆ ತುಳುಕಾಡುವುದು... ಎಂದಿದ್ದಾರೆ. ಪಂಪ ಕಲಿತವರ ಪಾಲಿನ ಕಲ್ಪವೃಕ್ಷ ವಾದರೆ, ಕುಮಾರವ್ಯಾಸ ಕಲಿಯದವರ ಪಾಲಿನ ಕಾಮಧೇನು. ದಾಸ ಸಾಹಿತ್ಯ ದಾಸ ಸಾಹಿತ್ಯ (ಭಕ್ತಿ ಸಾಹಿತ್ಯ) ೧೫ನೇ ಶತಮಾನದಲ್ಲಿ ಆರಂಭಗೊಂಡ ಭಕ್ತಿ ಪಂಥದ ಹರಿದಾಸರಿಂದ ವಿರಚಿತವಾದದ್ದು. ಈ ಪದ್ಯಗಳಿಗೆ ಸಾಮಾನ್ಯವಾಗಿ 'ಪದ' ಗಳೆಂದು ಹೆಸರು. ಇವು ಭಗವಂತನಲ್ಲಿ ಒಂದಾಗ ಬಯಸುವ ಭಕ್ತನ ಭಾವವನ್ನು ಪ್ರತಿಬಿಂಬಿಸುತ್ತವೆ. ಈ ಸಾಹಿತ್ಯ ಸಂಗೀತದೊಂದಿಗೂ ನಿಲುಕಿದೆ. ದಾಸ ಸಾಹಿತ್ಯ ಸಂಗೀತ ಪದ್ಧತಿಗಳಲ್ಲೊಂದಾದ ಕರ್ನಾಟಕ ಸಂಗೀತಕ್ಕೆ ಬುನಾದಿಯಾಗಿದೆ. ದಾಸರ ಪದಗಳಿಗೆ ದೇವರನಾಮಗಳೆಂದೂ ಹೆಸರು. ಈ ಪ್ರಕಾರದ ಮುಖ್ಯ ಕನ್ನಡ ಕವಿಗಳೆಂದರೆ ಪುರಂದರದಾಸ (೧೪೯೪-೧೫೬೪) ಮತ್ತು ಕನಕದಾಸ(೧೫೦೯-೧೬೦೯). ಇವರನ್ನು ದಾಸ ಸಾಹಿತ್ಯದ ಅಶ್ವಿನಿದೇವತೆಗಳೆಂದು ಕರೆಯಲಾಗಿದೆ. ಆಧುನಿಕ ಕನ್ನಡ ಕನ್ನಡದ ನವೋದಯ ನವೋದಯ ಎಂದರೆ ಹೊಸ ಹುಟ್ಟು/ಹೊಸದು. ಬ್ರಿಟಿಷ್ ಆಳ್ವಿಕೆಯ ಪ್ರಾರಂಭಿಕ ಹಂತಗಳಲ್ಲಿ ಹೆಚ್ಚು ಬೆಳಕು ಕಾಣದೆ ಇದ್ದ ಕನ್ನಡ ಸಾಹಿತ್ಯ, ೧೯ನೇ ಶತಮಾನದ ಕೊನೆಗೆ ಹಾಗು ಇಪ್ಪತ್ತನೆ ಶತಮಾನದ ಆರಂಭದಲ್ಲಿ ಹೊಸ ಹುಟ್ಟು ಪಡೆಯಿತು. ಆಧುನಿಕ ಕನ್ನಡ ಕಾವ್ಯದ ಬೆಳವಣಿಗೆಗೆ ಕಾರಣವಾಯಿತು. ಈ ಹಂತದಲ್ಲಿ ಬಿ.ಎಂ.ಶ್ರೀ, ಕುವೆಂಪು, ಬೇಂದ್ರೆ, ಶಿವರಾಮ ಕಾರಂತ ಮೊದಲಾದ ಶ್ರೇಷ್ಠ ಲೇಖಕರು ಬೆಳಕಿಗೆ ಬಂದರು. ಈ ಕಾಲದ ಸಾಹಿತ್ಯ ಪ್ರಕಾರಗಳು ರೊಮ್ಯಾಂಟಿಕ್ ಇಂಗ್ಲಿಷ್ ಕಾವ್ಯ ಮತ್ತು ಗ್ರೀಕ್ ರುದ್ರನಾಟಕಗಳಿಂದ ಪ್ರಭಾವಿತವಾಯಿತು. ಈ ಘಟ್ಟದ ಬೆಳವಣಿಗೆಯನ್ನು ತಂದವರು ಬಿ.ಎಂ.ಶ್ರೀ, ತಮ್ಮ ಇಂಗ್ಲಿಷ್ ಗೀತಗಳ ಪುಸ್ತಕ ದೊಂದಿಗೆ. ಅನೇಕ ಸುಶಿಕ್ಷಿತ ಕನ್ನಡಿಗರು, ಮುಖ್ಯವಾಗಿ ಶಿಕ್ಷಕ ವೃತ್ತಿಯಲ್ಲಿದ್ದವರು, ತಮ್ಮ ಮಾತೃಭಾಷೆಯಲ್ಲಿ ಬರೆಯುವುದರ ಮಹತ್ವವನ್ನು ಕಂಡು ಕೊಂಡು ಕನ್ನಡ ಸಾಹಿತ್ಯಕ್ಕೆ ಪ್ರೇರಣೆಯನ್ನೊದಗಿಸಿದರು. ಇದಕ್ಕೆ ಉದಾಹರಣೆಯಾಗಿ ಕುವೆಂಪು - ತಮ್ಮ ಒಬ್ಬ ಶಿಕ್ಷಕರಿಂದ (ಬ್ರಿಟಿಷ್ ಮೂಲದವರು) ಕನ್ನಡದಲ್ಲಿ ಬರೆಯುವುದರ ಮಹತ್ವವನ್ನು ಕಂಡುಕೊಂಡು ಮುಂದೆ ರಾಷ್ಟ್ರಕವಿ ಬಿರುದಿಗೆ ಪಾತ್ರರಾದರು. ಅವರ ಪ್ರಕೃತಿಪ್ರೇಮ, ಮಾನವನ ಉನ್ನತಿಯಲ್ಲಿ ನಂಬಿಕೆ ಮತ್ತು ಪ್ರಕೃತಿ ಮತ್ತು ದೇವರ ಸಮ್ಮಿಶ್ರಣವನ್ನು ಕಾಣುವ ಅವರ ಮನಸ್ಸು ಅವರನ್ನು ಕನ್ನಡದ ಉಚ್ಚ ಕವಿಗಳಲ್ಲಿ ಒಬ್ಬರನ್ನಾಗಿ ಮಾಡಿವೆ. ಅವರ ಅತಿ ಪ್ರಸಿದ್ಧ ಕಾವ್ಯಕೃತಿ ಶ್ರೀ ರಾಮಾಯಣ ದರ್ಶನಂ. ಇದಕ್ಕೆ ಉದಾಹರಣೆಯಾಗಿ ನಿಂತಿರುವ ಮತ್ತೊಬ್ಬ ಲೇಖಕರೆಂದರೆ ಶಿವರಾಮ ಕಾರಂತ - ಅತ್ಯಂತ ಬುದ್ಧಿಮತ್ತೆಯ, ಆಳವಾದ ಆದರ್ಶಗಳುಳ್ಳ ವ್ಯಕ್ತಿತ್ವ, ಹಾಗೂ ಅಷ್ಟೇ ಆಳವಾದ ಸಾಮಾಜಿಕ ಕಳಕಳಿಯಿದ್ದ ಲೇಖಕರು. ಅವರ ಶಕ್ತಿಶಾಲಿ ಸಾಮಾಜಿಕ ಕಾದಂಬರಿಗಳಲ್ಲಿ ಪ್ರಸಿದ್ಧವಾದವು-ಚೋಮನ ದುಡಿ, ಬೆಟ್ಟದ ಜೀವ, ಮೈಮನಗಳ ಸುಳಿಯಲ್ಲಿ, ಮರಳಿ ಮಣ್ಣಿಗೆ ಮತ್ತು ಮೂಕಜ್ಜಿಯ ಕನಸುಗಳು ಮೊದಲಾದುವು. ಈ ಕಾಲದ ಪ್ರಸಿದ್ಧ ಕವಿಗಳು ಕುವೆಂಪು, ಬಿ.ಎಂ.ಶ್ರೀ, ದ.ರಾ.ಬೇಂದ್ರೆ, ಪು ತಿ ನ, ಕೆ.ಎಸ್. ನರಸಿಂಹಸ್ವಾಮಿ, ಎಂ.ಗೋಪಾಲಕೃಷ್ಣ ಅಡಿಗ, ಪ್ರೊ‌.ನಿಸಾರ್ ಅಹಮದ್ ಚೆನ್ನವೀರ ಕಣವಿ ಮೊದಲಾದವರು. ಡಾ.ಚಂದ್ರಶೇಖರ್ ಕಂಬಾರ-ಕವಿ- ನಾಟಕಕಾರ - ಕಾದಂಬರಿಕಾರ- ಸಂಶೋಧಕ ಡಿ.ವಿ.ಜಿ. ಈ ಕಾಲದ ಪ್ರಸಿದ್ಧ ಕಾದಂಬರಿಕಾರರು ಕುವೆಂಪು, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಐಯ್ಯಂಗಾರ್, ಅ.ನ.ಕೃ, ಯು.ಆರ್.ಅನಂತಮೂರ್ತಿ, ವಿ. ಕೃ. ಗೋಕಾಕ್ ಡಿ.ವಿ.ಗುಂಡಪ್ಪ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಕೆ.ವಿ.ಅಯ್ಯರ್ ಮಂಜೇಶ್ವರ ಗೋವಿಂದ ಪೈ ತೀ ನಂ ಶ್ರೀ ಎಸ್. ಎಲ್. ಭೈರಪ್ಪ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಮುಂತಾದವರು. ಈ ಕಾಲದ ಪ್ರಸಿದ್ಧ ನಾಟಕಕಾರರು ಟಿ.ಪಿ.ಕೈಲಾಸಂ, ಶ್ರೀರಂಗ, ಕುವೆಂಪು, ಬಿ.ಎಂ.ಶ್ರೀ, ಬಿ.ವಿ. ಕಾರಂತ ಮೊದಲಾದವರು. ನವ್ಯ ೧೯೪೭ ರ ಭಾರತದ ಸ್ವಾತಂತ್ರ್ಯಾನಂತರ ಕನ್ನಡ ಸಾಹಿತ್ಯದಲ್ಲಿ ಇನ್ನೊಂದು ಹೊಸ ಸಾಹಿತ್ಯ ಪ್ರಕಾರದ ಉಗಮವಾಯಿತು: ನವ್ಯ. ಈ ಪ್ರಕಾರದ ಪಿತಾಮಹರೆಂದರೆ ಗೋಪಾಲಕೃಷ್ಣ ಅಡಿಗರು. ನವ್ಯ ಕವಿಗಳು ನಿರಾಶಾವಾದಿ ಬುದ್ಧಿಜೀವಿಗಳಿಗಾಗಿ ಹಾಗೂ ನಿರಾಶಾ ವಾದಿ ಬುದ್ಧಿಜೀವಿಗಳಂತೆ ಕಾವ್ಯ ರಚಿಸಿದರು. ಭಾಷಾಪ್ರಯೋಗದ ಚಮತ್ಕಾರ ಹಾಗೂ ಕಾವ್ಯತಂತ್ರ ಹೊಸ ಎತ್ತರವನ್ನು ಈ ಪ್ರಕಾರದಲ್ಲಿ ಕಂಡಿತು. ಇತರ ಪ್ರಕಾರಗಳು ಕಳೆದ ಐದು ದಶಕಗಳಲ್ಲಿ ಕನ್ನಡ ಸಾಹಿತ್ಯದ ದಾರಿ ಸಾಮಾಜಿಕ ವಿಷಯಗಳನ್ನು ಕುರಿತದ್ದಾಗಿದೆ. ಜಾತಿಪದ್ಧತಿಯ ತಾರತಮ್ಯಗಳಿಂದ ಬಂಡಾಯ ಮತ್ತು ದಲಿತ ಕಾವ್ಯ ಪ್ರೇರಿತವಾಗಿದೆ. ಸ್ತ್ರೀ-ವಿಮೋಚನಾ ಚಳುವಳಿಗಳು ಸ್ತ್ರೀ-ಕಾವ್ಯ ಪ್ರಕಾರಕ್ಕೆ ಎಡೆ ಮಾದಿಕೊಟ್ಟಿವೆ. ಸಣ್ಣ ಕಥೆಗಳು ಹಾಗೂ ಭಾವಗಿತೆಗಳು ಸಹ ಇಪ್ಪತ್ತನೆ ಶತಮಾನದಲ್ಲಿ ಜನಪ್ರಿಯವಾದ ಸಾಹಿತ್ಯ ಪ್ರಕಾರಗಳು ರಾಜ್ಯದ ಹಲವರು ತಮ್ಮನ್ನು ಸ್ಥಳೀಯ ಬಾಷೆಯಲ್ಲಿ ಕಥೆ ಕಾದಂಬರಿ ಬರೆಯುವಲ್ಲಿ ಗುರುತಿಸಿಕೊಂಡರು. ಅದರಲ್ಲಿ ಬಾಳಾಸಾಹೇಬ ಲೋಕಾಪುರ ಅಮರೇಶ ನುಗಡೋಣಿ ಶಂಕರ ಬೈಚಬಾಳ ಲೋಕೇಶ ಅಗಸನಕಟ್ಟೆ ಮುಂತಾದ ಹಲವರನ್ನು ಇಲ್ಲಿ ಹೆಸರಿಸಬಹುದಾಗಿದೆ. ಪ್ರಶಸ್ತಿಗಳು ಕನ್ನಡ ಸಾಹಿತ್ಯದ ಶಕ್ತಿಗೆ ಕನ್ನಡಿಯಾಗಿ ಕನ್ನಡ ಸಾಹಿತ್ಯಕ್ಕೆ ಇದುವರೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಇದು ಭಾರತೀಯ ಭಾಷೆಗಳಲ್ಲಿ ಅತಿ ಹೆಚ್ಚು. ಆಗಸ್ಟ್ ೨೦೦೪ ರ ವರೆಗೆ ಒಟ್ಟು ೪೬ ಕನ್ನಡ ಭಾರತ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಜನಸಂಪರ್ಕ ಯಾವುದೇ ಭಾಷೆಯ ಸಾಹಿತ್ಯದ ಜನಪ್ರಿಯತೆ ಸುಶಿಕ್ಷಿತ ಮತ್ತು ಆಸಕ್ತ ಜನರಿಂದೆ ಪಡೆದ ಮನ್ನಣೆಯನ್ನು ಅವಲಂಬಿಸುತ್ತದೆ. ಆದರೆ ಕಾವ್ಯದ ನಿಜವಾದ ಜನಪ್ರಿಯತೆ ತಿಳಿದು ಬರುವುದು ಅದು ಸಾಮಾನ್ಯ ಜನರ ಬಾಯಲ್ಲಿ ನಲಿದಾಗ. ಯಾವುದೇ ಸಾಹಿತ್ಯ ಪ್ರಕಾರಕ್ಕೂ ಸರ್ವಜನಮಾನ್ಯತೆ ಪಡೆಯುವುದು ಕಷ್ಟ. ಕನ್ನಡ ಸಾಹಿತ್ಯದ ಕೆಲವು ಪ್ರಕಾರಗಳು ಇಂತಹ ಮಾನ್ಯತೆಯನ್ನು ಪಡೆದಿವೆ. ಕುಮಾರವ್ಯಾಸನ ಭಾರತ ಇಂದಿಗೂ ಜನಪ್ರಿಯವಾಗಿ ಉಳಿದಿದೆ. ಭಾವಗೀತೆಗಳು ಅನೇಕ ಕನ್ನಡ ಹಾಡುಗಳನ್ನು ಜನಪ್ರಿಯಗೊಳಿಸಿ ಜನರ ಬಾಯಲ್ಲಿ ಓಡಾಡುತ್ತಿವೆ. ಹಳೆ ಕನ್ನಡದ ಗದ್ಯ/ಕವಿಗಳು ಕವಿರಾಜಮಾರ್ಗ - ಶ್ರೀವಿಜಯ ಛಂದೊಂಬುಧಿ - ನಾಗವರ್ಮ-1 ಕವಿಜೀಹ್ವಾಬಂಧನ - ಈಶ್ವರಕವಿ ಛಂದಸ್ಸಾರ - ಗುಣವರ್ಮ ನಂದಿಛಂದಸ್ಸು - ವೀರಭದ್ರ ವಡ್ಡಾರಾಧನೆ -ಶಿವಕೋಟ್ಯಾಚಾರ್ಯ ನಾಗವರ್ಮ-೨ ಉದಯಾದಿತ್ಯಾಲಂಕಾರ - ಉದಯಾದಿತ್ಯ ಶೃಂಗಾರ ರತ್ನಾಕರ - ಕಾಮದೇವ ಮಾಧವಾಲಂಕಾರ - ಮಾಧವ ರಸರತ್ನಾಕರ - ಸಾಳ್ವ ನರಪತಿಚರಿತೆ - ಲಿಂಗರಾಜ ಅಪ್ರತಿಮವೀರಚರಿತೆ - ತಿರುಮಲರಾಯ ಶಬ್ದಮಣಿದರ್ಪಣ - ಕೇಶಿರಾಜ ಸಂಬಂಧಿತ ಲೇಖನಗಳು ಕನ್ನಡ ಕರ್ನಾಟಕ ಭಾರತ ಕನ್ನಡ ಸಾಹಿತ್ಯ ಪ್ರಕಾರಗಳು| ಆಧುನಿಕ ಕನ್ನಡ ಕಾವ್ಯದ ಬೆಳವಣಿಗೆ ಲಕ್ಷ್ಮೀಶ ಜೈಮಿನಿ ಭಾರತ ಜೈಮಿನಿ ಭಾರತದಲ್ಲಿ ನವರಸಗಳು ಜೈಮಿನಿ ಭಾರತದಲ್ಲಿ ಅಲಂಕಾರಗಳು ಕನ್ನಡ ಸಾಹಿತ್ಯ ಪರಿಷತ್ತು ಇಂಗ್ಲಿಷ್‍ನಲ್ಲಿ ಕನ್ನಡ ಸಾಹಿತ್ಯ ದಿ ಲೈಫ್ ಆಫ್ ಹರಿಶ್ಚಂದ್ರ;800 ವರ್ಷಗಳ ನಂತರ ಇಂಗ್ಲಿಷ್‌ನಲ್ಲಿ ಹರಿಶ್ಚಂದ್ರ ಕಾವ್ಯ;ಪ್ರಜಾವಾಣಿ ವಾರ್ತೆ;17 Jan, 2017 ಬಾಹ್ಯ ಅಂತರ್ಜಾಲ ತಾಣಗಳು `ಚಿಲುಮೆ' - ಕನ್ನಡ ಸಾಹಿತ್ಯ ತಾಣ History of Kannada Literature-ಕನ್ನಡ ಸಾಹಿತ್ಯದ ಚರಿತ್ರೆ ಕನ್ನಡ ಸಾಹಿತ್ಯದ ಚರಿತ್ರೆ (ಕನ್ನಡ ಪುಟ) ಕನ್ನಡ ಲೇಖಕರ ಛಾಯಾಚಿತ್ರಗಳು ಕನ್ನಡ ರಸಾಯನ ಭಾರತ ಸಾಹಿತ್ಯ ಅಕಾಡೆಮಿ ಪ್ರಶತಿ ಪುರಸ್ಕೃತ ಕನ್ನಡ ಸಾಹಿತಿಗಳು ಜ್ಞಾನಪೀಠ ಪುರಸ್ಕೃತ ಭಾರತೀಯ ಸಾಹಿತಿಗಳು ಸಾಹಿತ್ಯ ಕನ್ನಡ ಸಾಹಿತಿಗಳು
927
https://kn.wikipedia.org/wiki/%E0%B2%AA%E0%B2%9F%E0%B3%8D%E0%B2%9F%E0%B2%A6%E0%B2%95%E0%B2%B2%E0%B3%8D%E0%B2%B2%E0%B3%81
ಪಟ್ಟದಕಲ್ಲು
ಪಟ್ಟದಕಲ್ಲು ಭಾರತದ ಕರ್ನಾಟಕ ರಾಜ್ಯದಲ್ಲಿರುವ ಪಟ್ಟಣಗಳಲ್ಲಿ ಒಂದು. ಹಿಂದೂ ದೇವಸ್ಥಾನಗಳ ಶಿಲ್ಪಕಲೆಯ ಪ್ರಪ್ರಥಮ ಪ್ರಯೋಗಗಳನ್ನು ಪ್ರತಿನಿಧಿಸುವ ದೇವಾಲಗಳ ಗುoಪಿಗೆ ಪಟ್ಟದಕಲ್ಲು ಪ್ರಸಿದ್ಧ. ಇಲ್ಲಿನ ಶಿಲ್ಪಕಲೆಯ ವಿಶಿಷ್ಟತೆ - ದಕ್ಷಿಣಭಾರತದ ದ್ರಾವಿಡ ಶೈಲಿ ಹಾಗೂ ಉತ್ತರ ಭಾರತದ ಆರ್ಯ ಶೈಲಿ - ಎರಡನ್ನೂ ಇಲ್ಲಿ ಕಾಣಬಹುದು. ಪಟ್ಟದಕಲ್ಲು ಕೆಲಕಾಲ ದಕ್ಷಿಣ ಭಾರತದ ಚಾಲುಕ್ಯ ವoಶದ ರಾಜಧಾನಿಯಾಗಿತ್ತು . ಚಾಲುಕ್ಯ ವoಶದ ಅರಸರು ಏಳನೇ ಮತ್ತು ಎoಟನೇ ಶತಮಾನಗಳಲ್ಲಿ ಇಲ್ಲಿನ ದೇವಾಲಯಗಳನ್ನು ಕಟ್ಟಿಸಿದರು. ಇಲ್ಲಿ ಒoಬತ್ತು ಮುಖ್ಯ ದೇವಾಲಯಗಳು ಮತ್ತು ಒಂದು ಜೈನ ಬಸದಿ ಇವೆ. ಎಲ್ಲಕ್ಕಿoತ ಪ್ರಸಿದ್ಧವಾದುದು ಕ್ರಿ.ಶ. ಸುಮಾರು ೭೪೦ ರಲ್ಲಿ ಮಹಾರಾಣಿ ಲೋಕಮಹಾದೇವಿ ಕಟ್ಟಿಸಿದ ವಿರೂಪಾಕ್ಷ ದೇವಾಲಯ. ಇದನ್ನು ೨ನೇ ವಿಕ್ರಮಾದಿತ್ಯನು ಕಂಚಿಯ ಪಲ್ಲವರ ಮೇಲೆ ಸಾಧಿಸಿದ ವಿಜಯದ ನೆನಪಿಗಾಗಿ ಕಟ್ಟಿಸಲಾಯಿತು. ಇದು ಕಂಚಿಯ ಕೈಲಾಸನಾಥ ದೇವಾಲಯದಂತೆ ಇದ್ದು ಅದನ್ನು ನೋಡಿ ಸ್ಫೂರ್ತಿಗೊಂಡು ಕಟ್ಟಿಸಲಾಗಿದೆ.ಇಲ್ಲಿರುವ ಇತರ ಮುಖ್ಯ ದೇವಾಲಯಗಳೆಂದರೆ ಮಲ್ಲಿಕಾರ್ಜುನ ದೇವಾಲಯ ಹಾಗೂ ಪಾಪನಾಥ ದೇವಸ್ಥಾನ. ಈ ಸ್ಥಳ ಚಾಳುಕ್ಯರ ಮಟ್ಟಿಗೆ ಅತ್ಯಂತ ಪ್ರಮುಖ ಸ್ಥಳ. ಚಾಳುಕ್ಯರ ಎಲ್ಲ ದೊರೆಗಳು ಇಲ್ಲಿನ ಉತ್ತರವಾಹಿನಿಯಲ್ಲಿ ಸ್ನಾನಗೈದ ನಂತರವೇ ಪಟ್ಟಾಭಿಷಿಕ್ತರಾಗುತ್ತಿದ್ದರಂತೆ. ಆದ್ದರಿಂದಲೇ ಈ ಸ್ಥಳಕ್ಕೆ 'ಪಟ್ಟದಕಲ್ಲು' ಎಂಬ ಹೆಸರು ಬಂದಿದೆ. ಕ್ರಿ ಶ 150ರಷ್ಟು ಹಿಂದೆಯೇ ಇತಿಹಾಸದಲ್ಲಿ ಈ ಊರಿನ ಪ್ರಸ್ತಾಪ ಸಿಗುತ್ತದೆ. ಪ್ರಸಿದ್ಧ ಇತಿಹಾಸಕಾರ ಟಾಲೆಮಿ ಉಲ್ಲೇಖದಲ್ಲಿ ಇದು 'ಪೇತಗಲ್' ಎಂದು ಅನೇಕ ಶಾಸನಗಳ್ಲಿ 'ಪಟ್ಟದ ಕಿಸುವೊಳಲ್' ಎಂದೂ ಉಲ್ಲೇಖಿತವಾಗಿದೆ. ಇಲ್ಲಿರುವ ಅನೇಕ ದೇವಾಲಯಗಳಲ್ಲಿ ಹತ್ತು ದೇವಾಲಯಗಳು ಶೈವ ಸಂಪ್ರದಾದವುಗಳಾಗಿದ್ದರೆ ಉಳಿದವು ಜೈನ ಹಾಗು ಇತರ ಮತಗಳ ದೇವಾಲಯಗಳಾಗಿವೆ. ಇಲ್ಲಿನ ದೇವಾಲಯಗಳಲ್ಲಿ ವಾಸ್ತುವಿನ್ಯಾಸ ಉತ್ತುಂಗವನ್ನು ತಲುಪಿದ್ದನ್ನು ಕಾಣುತ್ತೇವೆ.ಆ ಕಾರಣಕ್ಕಾಗೇ ಇಂದಿಗೂ ಅಸಂಖ್ಯ ಪ್ರವಾಸಿಗರನ್ನು ಸೆಳೆಯುತ್ತಿದೆ. ಈ ಸಮುಚ್ಚಯದಲ್ಲಿನ ಗಮನಸೆಳೆಯುವ ಪ್ರಮುಖ ದೇವಾಲಯಗಳೆಂದರೆ ವಿರೂಪಾಕ್ಷ ಹಾಗು ಮಲ್ಲಿಕಾರ್ಜುನ ದೇವಾಲಯಗಳು. ಈ ಎರಡೂ ದೇವಾಲಯಗಳ ವಿಶೇಷತೆಯೆಂದರೆ ಇವುಗಳನ್ನು ೨ನೇ ವಿಕ್ರಮಾದಿತ್ಯನು ತಮ್ಮ ಸಾಂಪ್ರದಾಯಿಕ ವೈರಿಗಳಾಗಿದ್ದ ಪಲ್ಲವರ ಮೇಲೆ ಸಾಧಿಸಿದ ದಿಗ್ವಿಜಯದ ನೆನಪಿಗಾಗಿ ಅವನ ಇಬ್ಬರು ರಾಣಿಯರು ಕಟ್ಟಿಸಿರುವುದು. ಇವು ಕಂಚಿಯಲ್ಲಿನ ಕೈಲಾಸ್ ನಾಥರ್ ದೇವಾಲಯದ ವಾಸ್ತುವಿನಿಂದ ಪ್ರಭಾವಿತವಾಗಿರುವುದು ಎದ್ದು ಕಾಣುತ್ತದೆ. ಅದರಲ್ಲೂ ವಿರೂಪಾಕ್ಷ ದೇವಾಲಯ ಒಂದು ಪರಿಪೂರ್ಣ ದೇವಾಲಯ ವಾಸ್ತುವಿಗೆ ಉದಾಹರಣೆಯಾಗಿದೆ. ಇದು ಕ್ರಿ ಶ 740ರಲ್ಲಿ ಹಿರಿಯ ರಾಣಿಯಾದ ಲೋಕಮಹಾದೇವಿಯಿಂದ ಕಟ್ಟಿಸಲ್ಪಟ್ಟಿದೆ. ಇದು ಪೂರ್ವಾಭಿಮುಖವಾಗಿದ್ದು ಮುಂದಿರುವ ತೆರೆದ ಮಂಟಪದಲ್ಲಿ ಸುಂದರವಾದ ನಂದಿ ವಿಗ್ರಹವಿದೆ. ಪಶ್ಚಿಮ ದಿಕ್ಕನ್ನು ಹೊರತುಪಡಿಸಿ ಉಳಿದೆಲ್ಲ ದಿಕ್ಕುಗಳಲ್ಲಿ ಮುಖಮಂಟಪವಿದ್ದು ದೇವಾಲಯದ ಒಳಗೆ ಸಭಾಮಂಟಪ ಹಾಗು ಪ್ರದಕ್ಷಿಣಾ ಪಥವಿದೆ. ಪ್ರವೇಶದಲ್ಲೇ ಇರುವ ವೇದಿಕೆ ಮೇಲೆ ವಸ್ತ್ರಾಭರಣಗಳಿಂದ ಶೋಭಿತರಾದ ರಾಜ ದಂಪತಿಗಳ ವಿವಿಧ ಭಂಗಿಯ ಶಿಲ್ಪಗಳು ಮನಸೆಳೆಯುತ್ತವೆ. ಇವು ವಿಕ್ರಮಾದಿತ್ಯ ಹಾಗು ರಾಣಿ ಲೋಕಮಹಾದೇವಿಯನ್ನು ಬಿಂಬಿಸುತ್ತವೆ(?). ಈ ದೇವಾಲಯದ ಶಿಲ್ಪಿ ಸರ್ವಸಿದ್ಧಿ ಆಚಾರಿ ಎಂಬುವವನು.ಇವನಿಗೆ ವಿಕ್ರಮಾದಿತ್ಯನು 'ಪೆರ್ಜೆರಿಪು' ಎಂಬ ಬಿರುದನ್ನು ಕೊಟ್ಟು ಸನ್ಮಾನಿಸಿರುವ ಬಗ್ಗೆ ಶಾಸನ ಬರೆಸಲಾಗಿದೆ. ಇಂಥ ಸುಂದರ ದೇವಾಲಯವೇ ಮುಂದೆ ರಾಷ್ಟ್ರಕೂಟರ ೧ನೇ ಕೃಷ್ಣನು ಎಲ್ಲೋರದಲ್ಲಿ ಕಟ್ಟಿಸಿದ ಕೈಲಾಸನಾಥ ಗುಹಾಲಯಕ್ಕೆ ಮುಖ್ಯ ಸ್ಫೂರ್ತಿಯಾಯಿತು. ಇದರ ಪಕ್ಕದಲ್ಲಿರುವುದೇ ಮಲ್ಲಿಕಾರ್ಜುನ ದೇವಾಲಯ. ಇದನ್ನು ವಿಕ್ರಮಾದಿತ್ಯನ ಮತ್ತೊಬ್ಬ ರಾಣಿ ತ್ರೈಲೋಕ್ಯದೇವಿಯು ಕ್ರಿ ಶ 743ರಲ್ಲಿ ನಿರ್ಮಿಸಿದಳು. ಈಗ ಇದು ಬಹುತೇಕ ಹಾಳಾಗಿದ್ದು ನೋಡುಗರಿಗೆ ಹಿಂದೊಮ್ಮೆ ಇದ್ದಿರಬಹುದಾದ ವೈಭವವನ್ನು ಕಣ್ಣಮುಂದೆ ತಂದು ನಿಲ್ಲಿಸುತ್ತದೆ. ಇದು ಕೂಡ ವಾಸ್ತು ವಿನ್ನ್ಯಾಸದಲ್ಲಿ ವಿರುಪಾಕ್ಷ ದೇವಾಲಯವನ್ನು ಹೋಲುತ್ತದೆ. ಇದನ್ನೂ ಅದೇ ಶಿಲ್ಪಿಗಳು ನಿರ್ಮಿಸಿರುವ ಸಾಧ್ಯತೆ ಇದೆ. ಇವೆರಡು ದೇವಾಲಯಗಳ ಹೊರತಾಗಿ ಇಲ್ಲಿನ ಸಮುಚ್ಚಯದಲ್ಲಿ ಕಾಶಿ ವಿಶ್ವನಾಥ, ಪಾಪನಾಥ ಹಾಗು ಜಿನಾಲಯಗಳೂ ಇವೆ. ಜಿನಾಲಯದಲ್ಲಿನ ಕಲ್ಲಿನ ಆನೆಗಳು ಹಾಗು ಮೇಲ್ಮಹಡಿಗೆ ಹೋಗಲು ಇರುವ ಕಲ್ಲಿನ ಏಣಿಗಳು ತುಂಬ ಆರ್ಷಕವಾಗಿವೆ. ಇಲ್ಲಿರುವ ಸ್ಮಾರಕಗಳ ಗುoಪನ್ನು ಯುನೆಸ್ಕೋ ೧೯೮೭ ರಲ್ಲಿ ವಿಶ್ವ ಪರಂಪರೆಯ ತಾಣ ಎಂದು ಘೋಷಿಸಿದೆ. ಇತಿಹಾಸ ಪ್ರವಾಸೋದ್ಯಮ ವಿಶ್ವ ಪರಂಪರೆಯ ತಾಣಗಳು ಬಾದಾಮಿ ತಾಲೂಕಿನ ಪ್ರವಾಸಿ ತಾಣಗಳು
928
https://kn.wikipedia.org/wiki/%E0%B2%B5%E0%B2%BF%E0%B2%9C%E0%B2%AF%20%E0%B2%A6%E0%B2%B6%E0%B2%AE%E0%B2%BF
ವಿಜಯ ದಶಮಿ
ವಿಜಯ ದಶಮಿ - ನವರಾತ್ರಿ ಉತ್ಸವದ ಕಡೆಯ ದಿನ. ಈ ದಿನದಂದು ಪಾಂಡವರು ಶತ್ರುಗಳ ಮೇಲೆ ಜಯ ಸಾಧಿಸಿದ ದಿನವೆಂದು ಹೇಳಲಾಗುತ್ತದೆ. ಹೆಸರೇ ಹೇಳುವಂತೆ ಇದು ದಶಮಿ - ಹತ್ತನೆಯ ದಿನ ಅಂದರೆ ದಸರಾ ಉತ್ಸವದ ಹತ್ತನೆಯ ದಿನ. 'ದಶ ಅಹರ್' -> ದಶಹರ -> ದಶರಾ -> ದಸರಾ ಎಂದೇ ಪ್ರಸಿದ್ಧವಾಗಿರುವ ಶಕ್ತಿಪೂಜೆಯ ಶರನ್ನವರಾತ್ರಿಗಳ ನಂತರದ ವಿಜಯೋತ್ಸವದ ದಿನ. ಚಾಂದ್ರಮಾನ ರೀತಿಯಲ್ಲಿ ಹೇಳುವುದಾದರೆ ಶರದೃತುವಿನ ಆಶ್ವಯುಜ ಮಾಸ ಶುಕ್ಲಪಕ್ಷದ ಹತ್ತನೆಯ ದಿನ. 'ದಶಹರ'ದಂದು ದಶಕಂಠ ರಾವಣನನ್ನು ಶ್ರೀರಾಮನು ಸಂಹರಿಸಿದ ವಿಜಯೋತ್ಸವವೆಂದೂ ಪ್ರತೀತಿಯಿದೆ. ಉತ್ತರ JJIಭಾರತದ ಕೆಲವೆಡೆ ಈ ದಿನವನ್ನು ಹೊಸವರ್ಷದ ದಿನವೆಂದು ಆಚರಿಸುವ ಪದ್ಧತಿಯೂ ಇದೆ. ಪ್ರಾಮುಖ್ಯತೆ ಮಹಾಭಾರತದಂತೆ ಪಾಂಡವರು, ಮತ್ಸ್ಯದೇಶದ ರಾಜನಾದ ವಿರಾಟನ ರಾಜಧಾನಿಯಲ್ಲಿ ಒಂದು ವರ್ಷದ ಅಜ್ಞಾತವಾಸ ಮುಗಿದ ಬಳಿಕ ಕಾಡಿನಲ್ಲಿದ್ದ ಮಸಣದ ಶಮೀ ವೃಕ್ಷಕ್ಕೆ ಅಲ್ಲಿ ಅಡಗಿಸಿಟ್ಟಿದ್ದ ತಮ್ಮ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳಲು ಬಂದರಂತೆ. ಅಲ್ಲಿ ಶಮೀ ವೃಕ್ಷವನ್ನು ಪೂಜಿಸಿ, ಮಾತೆ ದುರ್ಗಾದೇವಿಯನ್ನು ನಮಿಸಿ, ಯುದ್ಧಕ್ಕೆ ಹೊರಟರಂತೆ. ಯುದ್ಧದಲ್ಲಿ ಜಯಶಾಲಿಯಾದದ್ದರಿಂದ ವಿಜಯದಶಮಿ ಎಂದು ಹೆಸರು ಬಂದಿತಂತೆ. ಇಂದಿಗೂ ಗುರುಹಿರಿಯರಿಗೆ ಶಮೀ ಎಲೆಗಳನ್ನು ನೀಡುತ್ತಾ ಈ ಕೆಳಗಿನ ಶ್ಲೋಕವನ್ನು ಹೇಳುವುದು ರೂಢಿಯಲ್ಲಿದೆ: ಶಮೀ ಶಮಯತೇ ಪಾಪಂ ಶಮೀ ಶತ್ರುವಿನಾಶಿನೀ | ಅರ್ಜುನಸ್ಯ ಧನುರ್ಧಾರೀ ರಾಮಸ್ಯ ಪ್ರಿಯದರ್ಶಿನೀ || ಕರಿಷ್ಯಮಾಣಯಾತ್ರಾಯಾ ಯಥಾಕಾಲಂ ಸುಖಂ ಮಯಾ | ತತ್ರ ನಿರ್ವಿಘ್ನಕರ್ತ್ರೀ ತ್ವಂ ಭವ ಶ್ರೀರಾಮಪೂಜಿತಾ || ಈ ವಿಜಯ ದಶಮಿ ದಿನದ೦ದೇ, 'ದ್ವೈತ ವೇದಾ೦ತ' ಅಥವ 'ತತ್ವ ಸಿದ್ಧಾ೦ತ'ದ ಪ್ರತಿಷ್ಠಾಪನಾಚಾರ್ಯರಾದ ಶ್ರೀ ಶ್ರೀ ವಿಶ್ವ ಗುರು ಶ್ರೀ ಮಧ್ವಾಚಾರ್ಯರು, ಉಡುಪಿಯ ಬಳಿ ಇರುವ "ಪಾಜಕ" ಎ೦ಬ ಸ್ಥಳದಲ್ಲಿ ಕ್ರಿ.ಶ. ೧೨೩೮ರಲ್ಲಿ ಅವತರಿಸಿದರು. ಹಾಗಾಗಿ, ವಿಜಯ ದಶಮಿಯ೦ದೇ ಮಧ್ವ ಜಯ೦ತಿಯನ್ನು ಅವರ ಅನುಯಾಯಿಗರು ಆಚರಿಸುತ್ತಾರೆ. ವಿಜಯದ ಶಮೀ ಜಯವು ಸಿದ್ಧವೆಂದು ನಂಬಿ ವಿಜಯದಶಮಿಯಂದು ಹಿಂದಿನ ಅರಸರು ದಂಡಯಾತ್ರೆಗೆ ಹೊರಡುತ್ತಿದ್ದರು; ಇನ್ನೂ ರಾಜವಂಶದವರಲ್ಲಿ ಆ ಪದ್ಧತಿ ಉಳಿದುಕೊಂಡಿದ್ದು, ಸಾಂಕೇತಿಕವಾಗಿ ತಮ್ಮ ಚತುರಂಗ ಸಮೇತವಾಗಿ ರಾಜ್ಯದ ಗಡಿಯನ್ನು ದಾಟಿದಂತೆ ಮಾಡಿ, ಹಿಂದಿರುಗುತ್ತಾರೆ. ವಿಜಯನಗರಸಾಮ್ರಾಜ್ಯದ ಕಾಲದಲ್ಲಿ ಆರಂಭವಾದ ಈ ಸೀಮೋಲ್ಲಂಘನ ಮೈಸೂರಿನ ಒಡೆಯರ ಕಾಲದಲ್ಲಿ ಮುಂದುವರೆಯಿತು. ಶಮೀವೃಕ್ಷವನ್ನು ಕನ್ನಡದಲ್ಲಿ ಬನ್ನಿಮರ ಎನ್ನುತ್ತಾರೆ. ಈಗಲೂ ವಿಜಯದಶಮಿಯಂದು ಒಡೆಯರ ವಂಶಜರು ಸಾಂಕೇತಿಕವಾಗಿ ಮೈಸೂರಿನಲ್ಲಿ ಬನ್ನಿಮಂಟಪಕ್ಕೆ ಮೆರವಣಿಗೆ ಸಮೇತ ಹೋಗಿ ಪೂಜೆ ಸಲ್ಲಿಸಿ ಬರುತ್ತಾರೆ. ಹೀಗೆ ಬನ್ನಿ ಅಥವಾ ಶಮೀ ಮರವು ವಿಜಯದ ಸಂಕೇತವಾದ್ದರಿಂದ ಕನ್ನಡದಲ್ಲಿ ವಿಜಯದಶಮಿಯನ್ನು ವಿಜಯ-ದಶಮೀ ಹಾಗೂ ವಿಜಯದ-ಶಮೀ ಎಂದು ಕನ್ನಡಿಗರು ಕೊಂಡಾಡುತ್ತಾರೆ. ಮೈಸೂರು ಪ್ರಾಂತ್ಯದ ಜನಸಾಮಾನ್ಯರಿಗೆ ವಿಜಯದಶಮಿಯ ದಿನದ ಜಂಬೂಸವಾರಿಯನ್ನು ನೋಡುವುದೆಂದರೆ ಪರಮ ಸಂತೋಷ. ರಾಮಲೀಲ ಉತ್ಸವಗಳು ದೆಹಲಿ ಮತ್ತು ಇತರೆಡೆಗಳಲ್ಲಿ ವಿಜ್ರಂಭಣೆಯಿಂದ ನೆರವೇರುತ್ತದೆ. ಕಾಳಿ ವಿಗ್ರಹಗಳನ್ನು ಉತ್ಸವ ಸಮೇತವಾಗಿ ಕೊಂಡೊಯ್ದು ನೀರಿನಲ್ಲಿ ವಿಸರ್ಜಿಸುವ ಪದ್ಧತಿಯೂ ಪಶ್ಚಿಮ ಬಂಗಾಳ ಮತ್ತು ಇತರ ಹಲವೆಡೆಗಳಲ್ಲಿ ನಡೆಯುತ್ತಿದೆ. ಸತ್ಯಕ್ಕೇ ಜಯ. ಒಳಿತಿಗೇ ಗೆಲುವು. ಒಳಿತು ಕೆಡುಕಿನ ಮೇಲೆ ಜಯಸಾಧಿಸುತ್ತದೆ ಎಂಬ ನಂಬಿಕೆ ನಮ್ಮ ಸಂಸ್ಕೃತಿಯಲ್ಲಿ ನಿರಂತರವಾಗಿ ಹರಿದುಬಂದಿದೆ. ಒಳಿತು ಕೆಡುಕಿನ ಮೇಲೆ ಜಯಸಾಧಿಸಿದ ದಿನ ವಿಜಯದಶಮಿ ಎನ್ನಲಾಗಿದೆ. ಹೊರಗಿನ ಸಂಪರ್ಕಗಳು ಪಾಂಡವರ ಬಗ್ಗೆ ಮೈಸೂರು ದಸರಾ ತಾಣ] ಕಾಮತ್‌ರವರ ಬರಹ ನವರಾತ್ರಿ - ಬಿಬಿಸಿಯಲ್ಲಿ ಹಿಂದೂ ಧರ್ಮದ ಹಬ್ಬಗಳು ಹಬ್ಬಗಳು ಸಂಸ್ಕೃತಿ de:Dashahara en:Dasara gu:દશેરા hi:दशहरा ml:ദസ്റ mr:विजयादशमी ne:दसैं nl:Dashera nn:Vidjayadasjami no:Vijayadasami pl:Dasara uk:Дасара
934
https://kn.wikipedia.org/wiki/%E0%B2%9F%E0%B2%BF%E0%B2%AA%E0%B3%8D%E0%B2%AA%E0%B3%81%20%E0%B2%B8%E0%B3%81%E0%B2%B2%E0%B3%8D%E0%B2%A4%E0%B2%BE%E0%B2%A8%E0%B3%8D
ಟಿಪ್ಪು ಸುಲ್ತಾನ್
ಟಿಪ್ಪು ಸುಲ್ತಾನನು (ಸುಲ್ತಾನ್ ಫತೇಹ್ ಅಲಿ ಸಾಹಬ್ ಟಿಪ್ಪು; 1 ಡಿಸೆಂಬರ್ 1751 – 4 ಮೇ 1799), ಸಾಮಾನ್ಯವಾಗಿ ಶೇರ್-ಎ-ಮೈಸೂರ್ ಅಥವಾ "ಮೈಸೂರು ಹುಲಿ" ಎಂದು ಉಲ್ಲೇಖಿಸಲಾದವನು, ದಕ್ಷಿಣ ಭಾರತದ ಮೈಸೂರು ರಾಜ್ಯದ ಮುಸಲ್ಮಾನ ದೊರೆ.  ಭಾರತ.  ಅವನು ರಾಕೆಟ್ ಫಿರಂಗಿಗಳ ಪ್ರವರ್ತಕರಾಗಿದ್ದನು. ಅವನು ತನ್ನ ಆಡಳಿತದ ಅವಧಿಯಲ್ಲಿ ಹೊಸ ನಾಣ್ಯ ವ್ಯವಸ್ಥೆ ಮತ್ತು ಕ್ಯಾಲೆಂಡರ್, ಮತ್ತು ಹೊಸ ಭೂಕಂದಾಯ ವ್ಯವಸ್ಥೆಯನ್ನು ಒಳಗೊಂಡಂತೆ ಹಲವಾರು ಆಡಳಿತಾತ್ಮಕ ಆವಿಷ್ಕಾರಗಳನ್ನು ಪರಿಚಯಿಸಿದನು, ಇದು ಮೈಸೂರು ರೇಷ್ಮೆ ಉದ್ಯಮದ ಬೆಳವಣಿಗೆಯನ್ನು ಪ್ರಾರಂಭಿಸಿತು.  ಚನ್ನಪಟ್ಟಣದ ಆಟಿಕೆಗಳನ್ನು ಪರಿಚಯಿಸುವಲ್ಲಿ ಟಿಪ್ಪು ಕೂಡ ಪ್ರವರ್ತಕನಾಗಿದ್ದ.  ಅವರು ಕಬ್ಬಿಣಕವಚದ ಮೈಸೂರಿ ರಾಕೆಟ್‌ಗಳನ್ನು ವಿಸ್ತರಿಸಿದನು ಮತ್ತು ಮಿಲಿಟರಿ ಕೈಪಿಡಿ ಫತುಲ್ ಮುಜಾಹಿದೀನನ್ನು ನಿಯೋಜಿಸಿದರು, ಅವರು ಪೊಲ್ಲಿಲೂರ್ ಕದನ ಮತ್ತು ಶ್ರೀರಂಗಪಟ್ಟಣದ ಮುತ್ತಿಗೆಯಲ್ಲಿ ಆಂಗ್ಲಮೈಸೂರು ಯುದ್ಧಗಳ ಸಮಯದಲ್ಲಿ ಬ್ರಿಟಿಷ್ ಪಡೆಗಳು ಮತ್ತು ಅವರ ಮಿತ್ರರ ಪ್ರಗತಿಯ ವಿರುದ್ಧ ರಾಕೆಟ್‌ಗಳನ್ನು ನಿಯೋಜಿಸಿದನು. ಪರಿಚಯ ಇಮ್ಮಡಿ ಕೃಷ್ಣರಾಜ ಒಡೆಯರ್ ಮರಣದ ನಂತರ, ಹೈದರ್ ಅಲಿ, ಮೈಸೂರು ಸೇನೆಯ ಮಹಾದಂಡನಾಯಕ, ಪ್ರಾಂತದ ಅಧಿಕಾರವನ್ನು ವಹಿಸಿಕೊಂಡ, ಹೈದರ್ ಅಲಿಯ ಮರಣದ ನಂತರ ಆಳ್ವಿಕೆ ಅವನ ಪುತ್ರ ಟಿಪ್ಪುಸುಲ್ತಾನನಿಗೆ ಸಿಕ್ಕಿತು. ಮೈಸೂರಿನ ಹುಲಿ ಎಂದೇ ಪ್ರಖ್ಯಾತವಾದ ಟಿಪ್ಪುಸುಲ್ತಾನ್, ದಕ್ಷಿಣ ಭಾರತದಲ್ಲಿ ಯುರೋಪಿಯನ್ ವಿಸ್ತರಣೆ ತಡೆಗಟ್ಟಲು, ನಾಲ್ಕು ಯುದ್ದಗಳನ್ನು ಮಾಡಿದ ಆಂಗ್ಲೋ-ಮೈಸೂರು ಯುದ್ದಗಳು, ಕೊನೆಯದರಲ್ಲಿ ಅವನು ಮರಣವನ್ನಪ್ಪಿದ. ಮೈಸೂರು ರಾಜ್ಯ ಬ್ರಿಟಿಷ್ ರಾಜ್ಯ ಏಕೀಕರಣವಾಯಿತು. ಟಿಪ್ಪು ಸೇನಾ ತಂತ್ರಗಳನ್ನು ತನ್ನ ತಂದೆ, ಹೈದರಾಲಿಯೊಂದಿಗೆ ಇದ್ದ ಫ್ರೆಂಚ್ ಅಧಿಕಾರಿಗಳಿಂದ ಪಡೆದನು. ೧೭೬೭ ರ ಕರ್ನಾಟಕ ಯುದ್ಧದಲ್ಲಿ ಒಂದು ಅಶ್ವದಳದ ಅಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದನು. ಸೇನಾನಾಯಕನಾಗಿ ಟಿಪ್ಪು ಪ್ರಸಿದ್ದಿ ಪಡೆದದ್ದು ೧೭೭೫-೭೯ ರ ಆಂಗ್ಲೋ-ಮರಾಠಾ ಯುದ್ಧದಲ್ಲಿ. ೧೫ನೆಯ ವಯಸ್ಸಿನಲ್ಲಿ ತನ್ನ ತಂದೆ ಹೈದರಾಲಿಯ ಜೊತೆ ಪ್ರಥಮ ಮೈಸೂರು ಯುದ್ಧದಲ್ಲಿ ಭಾಗವಹಿಸಿ, ಒಂದು ದೊಡ್ಡ ಸೇನಾ ತುಕಡಿಯ ನಾಯಕನಾಗಿ ೧೭೮೨ರ ಫೆಬ್ರವರಿಯಲ್ಲಿ ಆಂಗ್ಲ ಸೇನಾನಾಯಕ ಬ್ರಾತ್‍ವೈಟ್‍ನನ್ನು ಸೋಲಿಸಿದನು. ಬಾಲ್ಯ ಟಿಪ್ಪು ಸುಲ್ತಾನ್ ಹುಟ್ಟಿದ್ದು (೨೦ ನವಂಬರ್ ೧೭೫೦), ಇಂದಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ (ಬೆಂಗಳೂರು ನಗರದಿಂದ ಸುಮಾರು ೩೩ ಕಿ.ಮೀ. ದೂರ)ತಂದೆ ಹೈದರ್ ತಾಯಿ ಫಾತಿಮಾ. ಟಿಪ್ಪುವಿನ ಅಜ್ಜ ಆರ್ಕಾಟ್ ನವಾಬನ ಸೇನೆಯಲ್ಲಿ ರಾಕೆಟ್ ಪಡೆಯ ಮುಖ್ಯಸ್ಥನಾಗಿದ್ದ. ಕಡಪಾ ಕೋಟೆಯ ಕಾವಲಿನ ಮುಖ್ಯಸ್ಥನ ಮಗಳು ಟಿಪ್ಪುವಿನ ಅಮ್ಮ. ಇಂಥ ವಾತಾವರಣದಲ್ಲಿ ಬೆಳೆದ ಟಿಪ್ಪುವಿಗೆ ಆಡಳಿತ, ಯುದ್ಧ, ವ್ಯೂಹ, ತಂತ್ರಗಾರಿಕೆ ಎಲ್ಲವೂ ಬಹು ಸಹಜವಾಗಿ ನೀರು ಕುಡಿದಂತೆ ಸಿದ್ಧಿಸಿತ್ತು. ವ್ಯಕ್ತಿತ್ವ ಟಿಪ್ಪು ತನ್ನನ್ನು ನಾಗರಿಕ ಟಿಪ್ಪು ಸುಲ್ತಾನ್ ಎಂದು ಕರೆದುಕೊಳ್ಳುತ್ತಿದ್ದ. ಆ ಕಾಲದ ಇತರ ಯಾವುದೇ ಸಾಮ್ರಾಜ್ಯಶಾಹಿ ಅಥವಾ ಸ್ವಾತಂತ್ರ್ಯಪೂರ್ಣ ವಿಚಾರಗಳನ್ನು ಒಪ್ಪದ ರಾಜರ ಅಭಿಪ್ರಾಯಗಳಿಗೆ ಇದು ಸಂಪೂರ್ಣ ವಿರುದ್ಧವಾದದ್ದು. ಅನೇಕ ಹಿಂದೂ ದೇವಾಲಯಗಳಿಗೆ ದಾನ ದತ್ತಿಗಳನ್ನು ಕೊಟ್ಟಿದ್ದನು. ಸಾಧನೆ ಮೈಸೂರನ್ನು ರಕ್ಷಿಸಲು ಬ್ರಿಟಿಷರೊಂದಿಗೆ ಹೋರಾಡಿದನು. ಬ್ರಿಟಿಷರೊಂದಿಗೆ ಹೋರಾಡಲು ನೆಪೋಲಿಯನ್ನನ ನೆರವನ್ನು ಪಡೆಯಲು ಪ್ರಯತ್ನಿಸಿದನು. ಯುದ್ಧದಲ್ಲಿ ರಾಕೆಟ್ ತಂತ್ರಜ್ಞಾನ ಪರಿಚಯಿಸಿದ ಮೊದಲ ವ್ಯಕ್ತಿ. ಮೈಸೂರು ರಾಜ್ಯಕ್ಕೆ ರೇಷ್ಮೆಯನ್ನು ಪರಿಚಯಿಸಿದನು. ಕುಣಿಗಲ್‍‍ನಲ್ಲಿ ಕುದುರೆ ಫಾರಂ ಸ್ಥಾಪಿಸಿದನು. ಕೇರಳದ ಮಲಬಾರಿನ ಹೆಣ್ಣುಗಳು ಮಾನ ಮುಚ್ಚಲು ರೇಷ್ಮೇ ವಸ್ತ್ರಗಳನ್ನೇ ದಾನ ಮಾಡಿದನು ಮತ್ತು ಸ್ತನ ತೆರಿಗೆಯನ್ನು ರದ್ದುಗೊಳಿಸಿದನು. ದಲಿತರ ಮೇಲಿನ ಬಹಿಷ್ಕಾರವನ್ನು ತೊಡೆದು ಹಾಕಿದನು. ಭೂ ಕಂದಾಯ ನೀತಿಯನ್ನು ಜಾರಿಗೆ ತಂದನು. ಆಡಳಿತ ಟಿಪ್ಪು ಮೈಸೂರಿನ ಆಳರಸರಲ್ಲಿ ಒಬ್ಬ. ಕ್ರಿ. ಶ. ೧೭೫೦, ನವೆಂಬರ್ ೨೦ರಂದು ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಹುಟ್ಟಿದ. ಕೇವಲ ೪೯ ವರ್ಷ ಬದುಕಿದ ಅವನ ಶೌರ್ಯ, ಬಲಿದಾನ, ಸ್ವಾಭಿಮಾನ ಕುರಿತು ಕತೆಗಳೇ ಇವೆ. ಯುದ್ಧದ ನಾನಾ ಕಲೆಗಳಲ್ಲಿ ನಿಷ್ಣಾತರಾದ ಕುಟುಂಬದಿಂದ ಬಂದವ ಟಿಪ್ಪು. ಅಸಮರ್ಥ ಹಾಗೂ ಅದಕ್ಷ ಮೈಸೂರರಸನನ್ನು ಸಿಂಹಾಸನದಿಂದ ಕೆಳಗಿಳಿಸಿ, ತಾನು ಪ್ರವಾದಿ ಮಹಮದರ ಕುರೇಶಿ ಪಂಗಡದವನೆಂದು ಸಾರಿ ರಾಜನಾದ ಹೈದರಾಲಿಯ ಮಗ. ಅನಕ್ಷರಸ್ಥನಾಗಿದ್ದ ಹೈದರಾಲಿ ಮಗ ಟಿಪ್ಪುವಿಗೆ ಸಣ್ಣಂದಿನಿಂದಲೇ ಸಕಲ ವಿದ್ಯೆಗಳನ್ನು ಕಲಿಸುವ ವ್ಯವಸ್ಥೆ ಮಾಡಿದ. ಉರ್ದು, ಪರ್ಷಿಯನ್, ಕನ್ನಡ, ಅರೇಬಿಕ್, ಕುರಾನ್, ಇಸ್ಲಾಮೀ ನ್ಯಾಯಶಾಸ್ತ್ರ, ಕುದುರೆ ಸವಾರಿ, ತೋಪು ಚಲಾಯಿಸುವುದು ಮುಂತಾದವುಗಳನ್ನೆಲ್ಲ ಕಲಿಸಲಾಯಿತು. ಹಲವು ಪರಿಣತಿಗಳಲ್ಲಿ ಜ್ಞಾನ ಸಂಪಾದಿಸಿದ ಟಿಪ್ಪು ಹೊಸ ಮೂಲೂದಿ ಇಸ್ಲಾಮಿ ಪಂಚಾಂಗ ದಿನಗಣನೆಯನ್ನು ಚಾಲ್ತಿಗೆ ತಂದ. ಮೈಸೂರು ತನ್ನ ತಂದೆಯ ಕೈವಶವಾಗುತ್ತಿದ್ದದ್ದನ್ನು ಟಿಪ್ಪು ಹದಿವಯಸ್ಸಿನಲ್ಲಿ ಗಮನಿಸುತ್ತಿದ್ದ. ರಾಜಕಾರಣದ ಒಳಹೊರಗುಗಳ ಅರಿಯುತ್ತ ತಾನೂ ರೂಪುಗೊಂಡ. ಹದಿವಯಸ್ಸಿನಲ್ಲಿಯೇ ಮೊದಲ ಮೈಸೂರು ಯುದ್ಧ, ಆರ್ಕಾಟ್ ಮೇಲಿನ ದಾಳಿಯಲ್ಲಿ ಭಾಗವಹಿಸಿ ಹದಿನೇಳರ ಹೊತ್ತಿಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಂತಾಗಿದ್ದ. ಟಿಪ್ಪುವಿಗೆ ಯುದ್ಧವಿದ್ಯೆ ಹೇಳಿಕೊಟ್ಟವರು ಫ್ರೆಂಚ್ ಕಮ್ಯಾಂಡರುಗಳು. ೧೭೮೨ರಲ್ಲಿ ಎರಡನೆ ಮೈಸೂರು ಯುದ್ಧ ನಡೆಯುತ್ತಿರುವಾಗಲೇ ಕ್ಯಾನ್ಸರಿನಿಂದ ಹೈದರಾಲಿ ತೀರಿಕೊಂಡಾಗ ತಂದೆ ಅರ್ಧಕ್ಕೆ ಬಿಟ್ಟುಹೋದ ಯುದ್ಧ ಗೆದ್ದು ತನಗೆ ಅನುಕೂಲಕರವಾದ ಷರತ್ತು ವಿಧಿಸಿ ಬ್ರಿಟಿಷರೊಂದಿಗೆ ಒಪ್ಪಂದ ಮಾಡಿಕೊಂಡ. ಹೀಗೆ ೩೨ ವರ್ಷದ ಟಿಪ್ಪು ವಿಶಾಲ ರಾಜ್ಯದ ಅಧಿಪತಿಯಾದ. ಬೆಂಗಳೂರಿನ ಲಾಲ್‌ಬಾಗನ್ನು ಪೂರ್ಣಗೊಳಿಸಿದ. ರಸ್ತೆ, ಕೆರೆಕಟ್ಟೆ, ಅರಮನೆಗಳ ನಿರ್ಮಿಸಿದ. ಮೈಸೂರು ರೇಶಿಮೆ ಉದ್ದಿಮೆಯಾಗಿ ಬೆಳೆಯಲು ಅನುವಾಗುವಂತೆ ಹೊಸ ತೆರನ ಕಂದಾಯ ವ್ಯವಸ್ಥೆ ಜಾರಿಗೆ ತಂದ. ಫಾತುಲ್ ಮುಜಾಹಿದೀನ್ ಎಂಬ ಮಿಲಿಟರಿ ಕೈಪಿಡಿ ಬರೆದ. ಪಾನ ನಿಷೇಧ ಜಾರಿಗೊಳಿಸಿದ. ರಾಜ್ಯದ ಗಡಿಗಳನ್ನು ದಕ್ಷಿಣ, ಪಶ್ಚಿಮದತ್ತ ವಿಸ್ತರಿಸಲು ಸುಲಭವಾಯಿತು.ಆದರೆ ಒಂದು ಕಡೆ ರಾಜ್ಯದ ಗಡಿ ವಿಸ್ತಾರಗೊಳ್ಳತೊಡಗಿದ್ದರೆ ಮತ್ತೊಂದು ಕಡೆ ಸಂಕುಚಿತಗೊಳ್ಳತೊಡಗಿತ್ತು. ೧೭೮೬ರ ಹೊತ್ತಿಗೆ ಮರಾಠರಿಗೆ ಮತ್ತು ನಿಜಾಮನ ಸೇನೆಗೆ ಉತ್ತರ ಕರ್ನಾಟಕದ ಬಹುಭಾಗ ಬಿಟ್ಟುಕೊಡಬೇಕಾಯಿತು. ಮರಾಠ ಪೇಶ್ವೆ ಮಾಧವ ರಾಯನ ದಳಪತಿ ನಾನಾ ಫಡ್ನವೀಸನ ಸೇನೆ ಬಾದಾಮಿ, ಕಿತ್ತೂರು, ಗಜೇಂದ್ರಗಡದವರೆಗೆ ತುಂಗಭದ್ರಾನದಿ ತನಕದ ಪ್ರದೇಶವನ್ನು ಮೈಸೂರಿನಿಂದ ಮರುವಶ ಪಡಿಸಿಕೊಂಡಿತು. ಅದೋನಿಯು ಹೈದರಾಬಾದ್ ನಿಜಾಮನ ಪಾಲಾಯಿತು. ಮರಾಠರೊಡನೆ ಒಪ್ಪಂದವಾಗಿ ಟಿಪ್ಪುವು ಯುದ್ಧಖರ್ಚು ೪೮ ಲಕ್ಷ ರೂಪಾಯಿ, ವಾರ್ಷಿಕ ಕಪ್ಪ ೧೨ ಲಕ್ಷ ರೂಪಾಯಿ ಕೊಡಬೇಕಾಯಿತು. ಈ ಸೋಲಿನ ಸಿಟ್ಟಿನಿಂದ ಕುದಿಯುತ್ತಿದ್ದ ಟಿಪ್ಪು ಗಮನವನ್ನು ಮಲಬಾರಿನೆಡೆ ಹರಿಸಿದ. ಅತ್ತ ಮಲಬಾರಿಗೆ ದೊಡ್ಡ ಸೇನೆ ಒಯ್ದಾಗ ಇತ್ತ ಬ್ರಿಟಿಷರು ಮಿತ್ರಸೇನೆಯೊಡಗೂಡಿ ಮೂರನೇ ಮೈಸೂರು ಯುದ್ಧ ಕೆದರಿದರು. ಆ ಯುದ್ಧದಲ್ಲಿ ಸೋಲು ಖಚಿತವೆನಿಸತೊಡಗಿದಾಗ ಸೈನ್ಯಕ್ಕೆ ಅನ್ನನೀರು ಪೂರೈಕೆ ಸಿಗದಂತೆ ಮಾಡಿ ಒಪ್ಪಂದಕ್ಕೆ ಬರುವಂತೆ ಮಾಡಿದ. ಮಿತ್ರಸೇನೆಯೊಂದಿಗೆ ಒಪ್ಪಂದವೇನೋ ಆಯಿತು. ಆದರೆ ತನ್ನ ಅರ್ಧ ಪ್ರಾಂತ್ಯ ಬಿಟ್ಟುಕೊಟ್ಟು ೩ ಕೋಟಿ ೩೦ ಲಕ್ಷ ರೂಪಾಯಿ ಯುದ್ಧ ಖರ್ಚನ್ನು ಕೊಡಬೇಕಾಯಿತು. ಅಷ್ಟು ಹಣ ಸಂದಾಯವಾಗುವವರೆಗೆ ತನ್ನಿಬ್ಬರು ಮಕ್ಕಳನ್ನು ಲಾರ್ಡ್ ಕಾರ್ನ್‌ವಾಲೀಸನ ಬಳಿ ಮದರಾಸಿನಲ್ಲಿ ಒತ್ತೆಯಿರಿಸಿ ಎರಡು ಕಂತಿನಲ್ಲಿ ಪೂರ್ತಿ ಹಣ ಕೊಟ್ಟು ಮಕ್ಕಳನ್ನು ಬಿಡಿಸಿ ತರಬೇಕಾಯಿತು. ಯಾವ ಎರಡನೆ ಮೈಸೂರು ಯುದ್ಧದ ಗೆಲುವು ಟಿಪ್ಪುವನ್ನು ರಾಜನನ್ನಾಗಿಸಿತೊ ಅದೇ ಯುದ್ಧವು ಅವನ ಅತಿಗಳ ಕುರಿತೂ ಹೇಳುತ್ತದೆ. ಬ್ರಿಟಿಷರನ್ನೇನೋ ಸೋಲಿಸಲಾಯಿತು, ಆದರೆ ತಂಜಾವೂರನ್ನು ಟಿಪ್ಪುವಿನ ಪಡೆಗಳು ಬುಡಮಟ್ಟ ನಾಶಮಾಡಿದವು. ತಂಜಾವೂರು ಚೇತರಿಸಿಕೊಳ್ಳಲು ಒಂದು ಶತಮಾನ ಹಿಡಿಯಿತು. ದನಕರು, ಬೆಳೆ ನಾಶವಷ್ಟೆ ಅಲ್ಲ, ೧೨,೦೦೦ ಮಕ್ಕಳನ್ನು ಟಿಪ್ಪು ಅಪಹರಿಸಿದ ಎಂಬ ದಾಖಲಾತಿಯೂ ಇದೆ. ವಸಾಹತುಶಾಹಿ ಬ್ರಿಟಿಷರ ವಿರುದ್ಧ ಹೋರಾಡಿದ ಅಪ್ರತಿಮ ಹೋರಾಟಗಾರ ಟಿಪ್ಪು. ಆದರೆ ಅವ ಹೋರಾಡಿದ್ದು, ಖ್ಯಾತ ಮೈಸೂರು ರಾಕೆಟ್ಟುಗಳನ್ನು ಬಳಸಿದ್ದು ಕೇವಲ ಬ್ರಿಟಿಷರ ವಿರುದ್ಧ ಮಾತ್ರವಲ್ಲ; ಆಚೀಚಿನ ರಾಜರುಗಳಾದ ಮರಾಠರು, ತಂಜಾವೂರು-ಮಲಬಾರ್-ಶಿರಾ-ಬಿದನೂರು-ಕೊಡಗು-ತಿರುವಾಂಕೂರು ಆಳ್ವಿಕರು, ಅರ್ಕಾಟಿನ ನವಾಬ, ಹೈದರಾಬಾದಿನ ನಿಜಾಮ ಇವರ ವಿರುದ್ಧ. ಕೊನೆಯತನಕ ಟಿಪ್ಪುವಿನ ಕಡುವೈರಿಗಳು ಮರಾಠರು ಮತ್ತು ಹೈದರಾಬಾದಿನ ನಿಜಾಮ. ಗತವೈಭವದ ಕನವರಿಕೆಯಲ್ಲಿ ಕೊನೆಯುಸಿರೆಳೆಯುತ್ತಿದ್ದ ಮುಘಲ್ ಸಾಮ್ರಾಜ್ಯದ ದೊರೆ ಶಾ ಅಲಂಗೆ ಟಿಪ್ಪು ತಾನೇತಾನಾಗಿ ಅಧೀನತೆಯನ್ನು ಪ್ರದರ್ಶಿಸುತ್ತಿದ್ದ. ಶಾ ಅಲಂನನ್ನು ಹಿಜ್ರಾ ಒಬ್ಬ ಕುರುಡನನ್ನಾಗಿಸಿ ಪದಚ್ಯುತಗೊಳಿಸಿದ ನಂತರ ಟಿಪ್ಪು ಮರಾಠರನ್ನು ಸೋಲಿಸಲು ಆಫ್ಘನಿಸ್ತಾನದ ದುರಾನಿ ರಾಜರನ್ನು ಸಂಪರ್ಕಿಸಿದ. ಬ್ರಿಟಿಷರ ವಿರುದ್ಧ ಆಕ್ರಮಣಕ್ಕೆ ತುರ್ತು ಸಹಾಯ ಮಾಡುವಂತೆ ಟರ್ಕಿಯ ಒಟ್ಟೊಮನ್ ರಾಜರ ಸಹಾಯ ಕೇಳಿದ. ಆದರೆ ಇವರಿಗೆಲ್ಲ ರಷ್ಯಾದ ವಿರುದ್ಧ ಹೋರಾಡಲು ಬ್ರಿಟಿಷರ ಸಹಾಯ ಬೇಕಿದ್ದರಿಂದ ಟಿಪ್ಪುವಿಗೆ ಸಹಾಯ ಮಾಡಲಾರದೆ ಹೋದರು. ಕೊನೆಗೆ ಬ್ರಿಟಿಷರ ವಿರುದ್ಧ ಫ್ರೆಂಚ್ ಯುದ್ಧವೀರ ನೆಪೋಲಿಯನ್ ಬೋನಪಾರ್ಟೆಯ ಸಹಾಯಕ್ಕಾಗಿ ಪ್ರಯತ್ನಿಸಲಾಯಿತು. ಒಂದನೆಯ ಮೈಸೂರು ಯುದ್ಧ (೧೭೬೬-೧೭೬೯) ಮೈಸೂರು ರಾಜ್ಯಕ್ಕೂ ಬ್ರಿಟೀಷರಿಗೂ ನಡೆದ ಯುದ್ಧ. ಈ ಯುದ್ಧ ಸರಣಿಯಲ್ಲಿ ಮೊದಲನೆಯದು. ಮೈಸೂರಿನ ಆಡಳಿತಾಧಿಕಾರಿ ಹೈದರಾಲಿಯ ಚಟುವಟಿಕೆಗಳನ್ನು ಮದರಾಸು ಪ್ರಾಂತದ ಬ್ರಿಟೀಷರು ಗಂಭೀರವಾಗಿ ಪರಿಗಣಿಸಿದರು. ೧೭೬೬ರಲ್ಲಿ ಬ್ರಿಟೀಷರು ಹೈದರಾಬಾದಿನ ನಿಜಾಮನೊಂದಿನ ಒಪ್ಪಂದ ಮಾಡಿಕೊಂಡು, ಅದರ ಪ್ರಕಾರ, ತಮ್ಮಿಬ್ಬರ ಸಮಾನ ಶತ್ರುವಾಗಿದ್ದ ಹೈದರಾಲಿಯ ವಿರುದ್ಧ ಬಳಸಲಿಕ್ಕಾಗಿ ಸೈನ್ಯವನ್ನು ಪೂರೈಸಿದರು. ಆದರೆ, ಈ ಒಪ್ಪಂದವಾದ ಸ್ವಲ್ಪ ಸಮಯದಲ್ಲಿಯೇ, ಹೈದರಾಲಿ ಮತ್ತು ನಿಜಾಮ ರಹಸ್ಯ ಒಪ್ಪಂದಕ್ಕೆ ಬಂದು, ಬ್ರಿಟೀಷರ ಕರ್ನಲ್ ಸ್ಮಿತ್‍ನ ಸಣ್ಣ ಸೇನೆಯ ಮೇಲೆ ತಮ್ಮ ಒಕ್ಕೂಟದ ೫೦,೦೦೦ ಸಿಪಾಯಿಗಳು ಮತ್ತು ೧೦೦ ತುಪಾಕಿಗಳ ಸೇನೆಯನ್ನು ನುಗ್ಗಿಸಿದರು. ಸಂಖ್ಯೆಯಲ್ಲಿ ಸಣ್ಣದಿದ್ದರೂ, ಬ್ರಿಟೀಷ್ ಪಡೆಗಳು,ಶಿಸ್ತು ಮತ್ತು ಉತ್ತಮ ತರಬೇತಿಯಿಂದಾಗಿ, ಒಕ್ಕೂಟದ ಸೇನೆಯನ್ನು ಮೊದಲು ಚೆಂಗಮ್ ಎಂಬಲ್ಲಿಯೂ ( ಸೆಪ್ಟೆಂರ್‍ ೩, ೧೭೬೭)ಮತ್ತೆ , ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ, ತಿರುವಣ್ಣಾಮಲೈಯಲ್ಲಿಯೂ ಹಿಮ್ಮೆಟ್ಟಿಸಿದರು. ಪಶ್ಚಿಮ ತೀರದ ತನ್ನ ನವೀನ ನೌಕಾಪಡೆ ಮತ್ತು ಕೋಟೆಗಳನ್ನು ಕಳೆದುಕೊಂಡ ನಂತರ ಹೈದರಾಲಿಯು ಸಂಧಾನಕ್ಕೆ ಬಂದನು. ಈ ಸಂಧಾನದ ಕೋರಿಕೆ ತಿರಸ್ಕೃತವಾಗಲು, ಹೈದರಾಲಿಯು ತನ್ನೆಲ್ಲ ಅಳಿದುಳಿದ ಸೈನ್ಯವನ್ನು ಒಗ್ಗೂಡಿಸಿ ಬ್ರಿಟೀಷರ ಮೇಲೇರಿ ಹೋದನು. ಕರ್ನಲ್ ಸ್ಮಿತ್ ಬೆಂಗಳೂರಿಗೆ ಹಾಕಿದ್ದ ಮುತ್ತಿಗೆಯನ್ನು ಹಿಂತೆಗೆದುಕೊಳ್ಳುವಂತೆ ಮಾಡಿದ್ದಲ್ಲದೆ, ತನ್ನ ಸೇನೆಯೊಡನೆಮದರಾಸು ನಗರದ ಐದು ಮೈಲಿಯಷ್ಟು ಸಮೀಪದವರೆಗೂ ಬಂದು ತಲುಪಿದನು. ಈ ಯುದ್ಧದ ಪರಿಣಾಮವಾಗಿ ಏಪ್ರಿಲ್ ೧೭೬೯ರಲ್ಲಿ, ಎರದೂ ಪಕ್ಷಗಳೂ ತಾವು ಆಕ್ರಮಿಸಿದ ಪ್ರದೇಶಗಳನ್ನು ವಾಪಸು ಮಾಡಬೇಕೆಂದು ಮತ್ತು ಯುದ್ಧಗಳಲ್ಲಿ ಪರಸ್ಪರರ ಸಹಾಯಕ್ಕೆ ಬರುವಂತೆಯೂ ಒಪ್ಪಂದವಾಯಿತು. ಈ ಒಪ್ಪಂದವನ್ನು "ಮದ್ರಾಸ್ ಒಪ್ಪಂದ" ಎಂದು ಕರೆಯುತ್ತಾರೆ. ಎರಡನೆಯ ಮೈಸೂರು ಯುದ್ಧ (೧೭೮೦-೧೭೮೪) ಮೈಸೂರು ಸಂಸ್ಥಾನಕ್ಕೂ ಬ್ರಿಟಷರಿಗೂ ನಡೆದ ಯುದ್ಧದ ಸರಣಿಯಲ್ಲಿ ಎರಡನೆಯದು. ಅಮೆರಿಕದಲ್ಲಿ ನಡೆಯುತ್ತಿದ್ದ ಕ್ರಾಂತಿಕಾರಿ ಹೋರಾಟದ ಫಲವಾಗಿ ಬ್ರಿಟಷರು ಮತ್ತು ಫ್ರೆಂಚರ ನಡುವೆ ನಡೆದ ಕದನದ ಸುಳಿಯಲ್ಲಿ ಫ್ರೆಂಚರ ಸ್ನೇಹದಲ್ಲಿದ್ದ ಮೈಸೂರು ಕೂಡಾ ಸಿಕ್ಕಿತು. ಆ ಕಾಲದಲ್ಲಿ ಮೈಸೂರನ್ನು ಆಳುತ್ತಿದ್ದವನು ( ರಾಜಾ ಎಂಬ ಗೌರವನಾಮ ಇಲ್ಲದಿದ್ದರೂ) ಹೈದರ್‍ ಆಲಿ. ಹಿಂದೊಮ್ಮೆ ಮರಾಠರ ವಿರುದ್ಧದ ಯುದ್ಧದಲ್ಲಿ ಬ್ರಿಟಿಷರ ವಿಶ್ವಾಸಘಾತುಕತನವನ್ನು ಕಂಡು ಕಿಡಿಕಿಡಿಯಾಗಿದ್ದ ಹೈದರ್‍ ಆಲಿ ಬ್ರಿಟಿಷರೊಂದಿಗೆ ಸೇಡು ತೀರಿಸಿಕೊಳ್ಳಲು, ಫ್ರೆಂಚರ ಸಹಾಯಕ್ಕೆ ಒಮ್ಮನಸ್ಸಿನಿಂದ ಧುಮುಕಿದ. ೧೭೭೮ರಲ್ಲಿ ಬ್ರಿಟನ್ ಮೇಲೆ ಯುದ್ಧ ಸಾರಿದಾಗ, ಈಗಾಗಲೇ ಮದರಾಸಿನಲ್ಲಿ ಬಲವಾಗಿ ಬೇರು ಬಿಟ್ಟಿದ್ದ ಬ್ರಿಟೀಷರು, ಫ್ರೆಂಚರನ್ನು ಭಾರತದಿಂದ ಓಡಿಸುವ ಪಣ ತೊಟ್ಟರು. ಮಲಬಾರ್‍ ತೀರದ ಮಾಹೆಯನ್ನು ಗೆದ್ದುಕೊಂಡ ಬ್ರಿಟೀಷರು, ಹೈದರನ ಆಶ್ರಿತನೊಬ್ಬನ ಕೆಲ ಭೂಭಾಗಗಳನ್ನೂ ಸ್ವಾಧೀನಕ್ಕೆ ತೆಗೆದುಕೊಂಡರು. ಸೇಡು ತೀರಿಸಿಕೊಳ್ಳಲು ಅವಕಾಶಕ್ಕಾಗಿ ಕಾಯುತ್ತಿದ್ದ ಹೈದರಾಲಿಯು, ಮರಾಠರು ತನ್ನಿಂದ ಕಿತ್ತುಕೊಂಡ ಪ್ರದೇಶಗಳನ್ನು ಮರುಪಡೆಯುವುದರಲ್ಲಿ ಯಶಸ್ವಿಯಾದನು. ಕೃಷ್ಣಾ ನದಿಯವರೆಗೆ ಹರಡಿದ್ದ ತನ್ನ ರಾಜ್ಯದಿಂದ, ಬೆಂಕಿ ಹೊತ್ತಿ ಉರಿಯುತ್ತಿದ್ದ ಗ್ರಾಮಗಳ ಮಧ್ಯೆ, ಕಣಿವೆ, ಘಟ್ಟಗಳನ್ನು ಬಳಸಿಕೊಂಡು, ಮದರಾಸಿನಿಂದ ಕೇವಲ ೪೫ ಮೈಲಿ ( ೭೨ ಕಿ.ಮೀ.) ದೂರದ ಕಾಂಜೀವರವನ್ನು ಒಂದಷ್ಟೂ ಪ್ರತಿರೋಧ ವಿಲ್ಲದೆ ತಲುಪಿದನು. ಮದರಾಸಿನ ಸೈಂಟ್ ಥಾಮಸ್ ಮೌಂಟಿನಲ್ಲಿ ೫೨೦೦ ಸೈನಿಕರೊಂದಿಗೆ ಬೀಡುಬಿಟ್ಟಿದ್ದ, ಸರ್‍ ಹೆಕ್ಟರ್‍ ಮನ್ರೋಗೆ ಬೆಂಕಿಯ ಜ್ವಾಲೆಗಳು ಕಾಣಿಸಿದ ನಂತರವೇ ಬ್ರಿಟೀಷರ ಪ್ರತಿಕ್ರಿಯೆಗೆ ಚಾಲನೆ ಸಿಕ್ಕಿತು. ಗುಂಟೂರಿಂದ ವಾಪಸು ಕರೆಸಿದ್ದ ಕರ್ನಲ್ ಬೈಲೀಯ ಕೈಕೆಳಗಿನ ಸಣ್ಣ ಸೈನ್ಯವನ್ನು ಹೈದರಾಲಿಯನ್ನು ಎದುರಿಸಲು ಕಳುಹಿಸಲಾಯಿತು. ಅಪ್ರತಿಮ ಧೈರ್ಯದಿಂದ ಕಾದಾಡಿದರೂ, ಬೈಲಿಯ ೨೮೦೦ ಜನರ ಸೇನೆ ಸಂಪೂರ್ಣ ಸೋಲಪ್ಪಿತು. ಆದಿನ ೧೭೮೦ರ ಸೆಪ್ಟೆಂಬರ್‍ ೧೦, 1782ರಲ್ಲಿ ಹೈದರಾಲಿ ಬೆನ್ನುಮೊಳೆ ರೋಗದಿಂದ ಮರಣ ಹೊಂದಿದನು. 1784ರಲ್ಲಿ ಮಂಗಳೂರು ಒಪ್ಪಂದದೊಂದಿಗೆ ಯುದ್ದ ಮುಕ್ತಾಯವಾಯಿತು. ಮೂರನೆಯ ಮೈಸೂರು ಯುದ್ಧ (೧೭೮೯-೧೭೯೨) ಮೈಸೂರು ರಾಜ್ಯಕ್ಕೂ ಬ್ರಿಟಿಷರಿಗೂ ನಡೆದ ಯುದ್ಧ. ನಾಲ್ಕು ಬಾರಿ ನಡೆದ ಯುದ್ಧ ಸರಣಿಯಲ್ಲಿ ಇದು ಮೂರನೆಯದು. ಫ್ರೆಂಚರೊಂದಿಗೆ ಮೈತ್ರಿಯಿದ್ದ ಮೈಸೂರಿನ ರಾಜ ಟಿಪ್ಪು ಸುಲ್ತಾನನು ಬ್ರಿಟಿಷ್ ಅಧೀನದಲ್ಲಿದ್ದ ಟ್ರಾವಂಕೂರಿನ ಮೇಲೆ ೧೭೮೯ರಲ್ಲಿ ದಂಡೆತ್ತಿ ಹೋದನು. ಆಗ ಪ್ರಾರಂಭವಾದ ಯುದ್ಧ ಮುಂದಿನ ಮೂರು ವರ್ಷಗಳವರೆಗೆ ಮುಂದುವರೆದು ಟಿಪ್ಪೂ ಸುಲ್ತಾನನ ಪರಾಭವದೊಂದಿಗೆ ಪರ್ಯವಸಾನಗೊಂಡಿತು. ತಮ್ಮದೇ ದೇಶದ ಫ್ರೆಂಚ್ ಕ್ರಾಂತಿಯನ್ನು ಎದುರಿಸುವುದರಲ್ಲಿ ಮಗ್ನರಾದ ಫ್ರೆಂಚರು, ಬ್ರಿಟಿಷರ ನೌಕಾದಳದಿಂದಲೂ ಹಿಮ್ಮೆಟ್ಟಿಸಲ್ಪಟ್ಟುದರಿಂದ, ಟಿಪ್ಪು ಸುಲ್ತಾನನ ನಿರೀಕ್ಷೆಯಂತೆ ಬೆಂಬಲ ನೀಡಲಿಲ್ಲ. ಟಿಪ್ಪು ಸುಲ್ತಾನ ರಾಕೆಟ್ಟುಗಳ ಪಡೆಯಿಂದ ಧಾಳಿ ಮಾಡಿದ್ದು ಈ ಯುದ್ಧದ ಹೆಗ್ಗಳಿಕೆ. ಈ ಧಾಳಿಯ ಪರಿಣಾಮ ನೋಡಿ ಮಾರುಹೋದ ಬ್ರಿಟಿಷ್ ವಿಜ್ಞಾನಿ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟುಗಳನ್ನು ಸಂಶೋಧಿಸಿದನು. ಈ ಯುದ್ಧದ ಪರಿಣಾಮವಾಗಿ ಟಿಪ್ಪುವು ತನ್ನ ರಾಜ್ಯದ ಕೆಲ ಭಾಗಗಳನ್ನು ಬ್ರಿಟಿಷರ ಬೆಂಬಲಿಗರೋ, ಏಜಂಟರೋ ಆಗಿದ್ದ ಮರಾಠರು, ಹೈದರಾಬಾದಿನ ನಿಜಾಮ ಮತ್ತು ಮದ್ರಾಸ್ ಪ್ರೆಸಿಡೆನ್ಸಿಗಳವರಿಗೆ ಹಂಚಿಕೊಡಬೇಕಾಗಿ ಬಂದು, ಇದರಿಂದ ಮೈಸೂರು ರಾಜ್ಯದ ವಿಸ್ತೀರ್ಣ ತೀವ್ರವಾಗಿ ಕುಸಿಯಿತು. ಮಲಬಾರ್‍, ಸೇಲಂ, ಬಳ್ಳಾರಿ ಮತ್ತು ಅನಂತಪುರ ಜಿಲ್ಲೆಗಳು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಹೋದವು. ಈ ಯುದ್ಧದ ಕೊನೆಯಲ್ಲಿ ಶ್ರೀರಂಗಪಟ್ಟಣದ ಒಪ್ಪಂದವಾಗಿ, ಅದರ ಪ್ರಕಾರ ಟಿಪ್ಪು ತನ್ನ ಅರ್ಧ ರಾಜ್ಯವನ್ನು ಬ್ರಿಟಿಷರಿಗೆ ಒಪ್ಪಿಸಿದ್ದಷ್ಟೇ ಅಲ್ಲದೇ, ತನ್ನಿಬ್ಬರು ಮಕ್ಕಳನ್ನು ಬ್ರಿಟಿಷರಲ್ಲಿ ಒತ್ತೆ ಇಡಬೇಕಾಗಿ ಬಂದಿತು. ನಾಲ್ಕನೆಯ ಮೈಸೂರು ಯುದ್ಧ (೧೭೯೮ – ೧೭೯೯) ಬ್ರಿಟೀಷರಿಗೂ ಮೈಸೂರು ರಾಜ್ಯಕ್ಕೂ ನಡೆದ ಯುದ್ಧ ಸರಣಿಯಲ್ಲಿ ನಾಲ್ಕನೆಯ ಹಾಗೂ ಕಡೆಯ ಯುದ್ಧ. ಆಗಿನ ಬ್ರಿಟೀಶ್ ಈಸ್ಟ್ ಇಂಡಿಯಾ ಕಂಪನಿಯ ಗವರ್ನರ್ ಜನರಲ್ ಪದವಿಯು ಲಾರ್ಡ್ ಕಾರ್ನವಾಲೀಸನಿಂದ ಜನರಲ್ ಹ್ಯಾರಿಸನಿಗೆ ಹಸ್ತಾಂತರ ಗೊಂಡಿತ್ತು. ೧೭೯೮ರಲ್ಲಿ ನೆಪೋಲಿಯನ್, ಭಾರತವನ್ನು ಹೆದರಿಸುವ ಉದ್ದೇಶದಿಂದ, ಈಜಿಪ್ಟಿನಲ್ಲಿ ಬಂದಿಳಿದ. ಈ ಉದ್ದೇಶ ಸಾಧನೆಗೆ, ಫ್ರಾನ್ಸಿನ ಮಿತ್ರನಾಗಿದ್ದ, ಮೈಸೂರಿನ ದೊರೆ ಟಿಪ್ಪು ಸುಲ್ತಾನ ಮುಖ್ಯವಾಗಿದ್ದ. ಹೊರಾಷಿಯೋ ನೆಲ್ಸನ್ನನು ನೆಪೋಲಿಯನ್ನನನ್ನು ನೈಲ್ ಯುದ್ಧದಲ್ಲಿ ಸೋಲಿಸಿ, ಈ ಆಸೆಯನ್ನು ಭಂಗಗೊಳಿಸಿದರೂ, ಮೂರು ಸೇನೆಗಳು ( ಒಂದು ಬಾಂಬೆ, ಎರಡು ಬ್ರಿಟೀಶ್ ) ಅಷ್ಟಕ್ಕೆ ನಿಲ್ಲದೆ ಮುನ್ನುಗ್ಗಿ ೧೭೯೯ರಲ್ಲಿ ಮೈಸೂರಿನ ರಾಜಧಾನಿ ಶ್ರೀರಂಗಪಟ್ಟಣಕ್ಕೆ ಮುತ್ತಿಗೆ ಹಾಕಿದವು. ಮೇ ನಾಲ್ಕರಂದು ಈ ಸೇನೆಗಳು ಕೋಟೆಯ ಭಾಗವೊಂದನ್ನು ಭಗ್ನಮಾಡಿ, ಒಳನುಗ್ಗತೊಡಗಿದರು. ಅಲ್ಲಿಗೆ ಧಾವಿಸಿದ ಟಿಪ್ಪು ಸುಲ್ತಾನ ಗುಂಡೇಟಿನಿಂದ ಅಸುನೀಗಿದ. ಈ ಕಾರ್ಯದಲ್ಲಿ ಟಿಪ್ಪುವಿನ ಸೇನಾಧಿಕಾರಿ ಮೀರ್ ಸಾದಕ್ ಎಂಬಾತ, ಬ್ರಿಟೀಷರೊಂದಿಗೆ ಶಾಮೀಲಾಗಿ, ಟಿಪ್ಪುವಿಗೆ ಎರಡು ಬಗೆದನು. ಯುದ್ಧದ ತೀವ್ರವಾಗಿದ್ದ ಸಮಯದಲ್ಲಿ ಮೀರ್ ಸಾದಕನು, ತನ್ನ ಸೇನಾ ತುಕಡಿಯನ್ನು ಸಂಬಳ ಪಡೆದುಕೊಳ್ಳಲು ಕಳುಹಿಸಿ, ಆ ಮೂಲಕ, ಬ್ರಿಟೀಷರು ಗೋಡೆ ಒಡೆದು ಒಳಬರಲು ಅನುವುಮಾಡಿಕೊಟ್ಟನು. ಅಷ್ಟೇ ಅಲ್ಲ, ನೆಲಮಾಳಿಗೆಯಲ್ಲಿ ಶೇಖರಿಸಿದ್ದ ಮದ್ದುಗುಂಡುಗಳ ಮೇಲೆ ನೀರು ಹೊಯ್ದು, ಅವು ನಿರುಪಯುಕ್ತವಾಗುವಂತೆ ಮಾಡಿದನು. ಈ ಯುದ್ಧದಲ್ಲಿ ಟಿಪ್ಪು ಸುಲ್ತಾನನು ರಾಕೆಟ್ಟುಗಳ ಉಪಯೋಗ ಮಾಡಿದ್ದು ಗಮನಾರ್ಹವಾಗಿತ್ತು. ಮೂರನೆಯ ಮತ್ತು ನಾಲ್ಕನೆಯ ಮೈಸೂರು ಯುದ್ಧಗಳಲ್ಲಿ ಈ ರಾಕೆಟ್ಟುಗಳ ಪರಿಣಾಮದಿಂದ ಪ್ರಭಾವಿತನಾದ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟ್ಟುಗಳನ್ನು ಸಂಶೋಧಿಸಿದನು. ಈ ಯುದ್ಧದ ಪರಿಣಾಮವಾಗಿ ಮೈಸೂರು ಬ್ರಿಟೀಷರ ವಶಕ್ಕೆ ಬಂದಿತು. ಒಡೆಯರ್ ವಂಶಕ್ಕೆ ಮರಳಿ ಅಧಿಕಾರ ದೊರೆತು, ಅವರಿಗೆ ಸಲಹಾಕಾರರಾಗಿ ಬ್ರಿಟೀಷ್ ಕಮೀಷನರು ನೇಮಿಸಲ್ಪಟ್ಟರು. ಟಿಪ್ಪುವಿನ ಎಳೆಯ ಮಗ ಮತ್ತು ಉತ್ತರಾಧಿಕಾರಿ ಫತೇ ಆಲಿಯನ್ನು ಗಡೀಪಾರು ಮಾಡಲಾಯಿತು. ಮೈಸೂರು ರಾಜ್ಯವು ಬ್ರಿಟೀಷ್ ಅಧೀನ ಸಂಸ್ಥಾನವಾಯಿತು. ಕೊಯಮತ್ತೂರು, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಬ್ರಿಟೀಷ್ ಭಾರತದ ಭಾಗವಾದವು. ರಾಕೆಟ್ ಬಳಕೆ ಹೈದರಾಲಿ ರಾಕೆಟ್ಟುಗಳನ್ನು ಅಭಿವೃದ್ಧಿಪಡಿಸಿ ಅದರ ಒಂದು ಪಡೆಯನ್ನೇ ಇಟ್ಟಿದ್ದರೆ, ಟಿಪ್ಪು ಕಬ್ಬಿಣದ ಹೊರಕವಚ ಹೊಂದಿದ ‘ಮೈಸೂರು ರಾಕೆಟ್ಟುಗಳನ್ನು ಅಭಿವೃದ್ಧಿಪಡಿಸಿದ. ಮುಂದೆ ಚೂಪಾದ ಬ್ಲೇಡು ಕಟ್ಟಿ, ಕಬ್ಬಿಣದ ಕೇಸುಗಳೊಳಗೆ ಮದ್ದಿನಪುಡಿ ತುಂಬಿದ್ದರಿಂದ ಅವುಗಳ ದೂರಗಾಮಿತ್ವ ಎರಡು ಕಿ.ಮೀ.ನಷ್ಟು ಹೆಚ್ಚಾಯಿತು. ಮೊದಲು ಈ ರಾಕೆಟ್ಟುಗಳನ್ನು ಎದುರುಗೊಂಡಾಗ ಬ್ರಿಟಿಷರ ತಂತ್ರಜ್ಞಾನ ಅದಕಿಂತ ಹಿಂದಿತ್ತು. ಎಂದೇ ಮೊದಲ ಯುದ್ಧಗಳನ್ನು ಟಿಪ್ಪು ಗೆಲ್ಲಲು ಸಾಧ್ಯವಾಯಿತು. ಟಿಪ್ಪು ಚರಿತ್ರೆ ಕಾಲದ ನಾಣ್ಯಗಳು ಆ ನಾಣ್ಯಗಳಿಗೆ ಎರಡು ಭಿನ್ನ ಮುಖಗಳಿರುತ್ತವೆ. ಎರಡು ಮುಖಗಳನ್ನು ಆ ಕಾಲದ ಅಗತ್ಯವು ರೂಪುಗೊಳಿಸಿರುತ್ತದೆ. ಚರಿತ್ರೆ ಕಾಲದ ನೀತಿಕೋಶವೇ ಬೇರೆ. ನ್ಯಾಯ, ನೀತಿ ಎಂಬ ಪದಗಳ ಅರ್ಥವೇ ಬೇರೆ. ಅವನ್ನು ಇವತ್ತು ಎಳೆತರುವುದು, ಹೋಲಿಸುವುದು ಸಾಧುವಲ್ಲ. ಕೊನೆಗೂ ಚರಿತ್ರೆಯೆಂದರೆ ಏನೆಂದು ನಿರ್ಣಯವಾಗಬೇಕಾದ್ದು ಆಕರಗಳಿಂದ ಮಾತ್ರವಲ್ಲ, ನ್ಯಾಯಸೂಕ್ಷ್ಮದ ಮನಸುಗಳಲ್ಲೇ ಎಂದು ನೆನಪಿಸಿಕೊಳ್ಳುತ್ತ ಟಿಪ್ಪು ಸುಲ್ತಾನನ ಎರಡು ಭಿನ್ನ ವ್ಯಕ್ತಿತ್ವಗಳನ್ನು ಪೂರ್ವಗ್ರಹಗಳನ್ನಿಟ್ಟುಕೊಳ್ಳದ ಚರಿತ್ರೆಯ ಆಕರಗಳಿಂದ ಇಲ್ಲಿಡಲಾಗಿದೆ. ಟಿಪ್ಪುವಿನ ಕೊನೆಯ ದಿನಗಳು ಕೊನೆಯ ಮೈಸೂರು ಯುದ್ಧದಲ್ಲಿ ಬ್ರಿಟಿಷ್ ಪಡೆ ಕೋಟೆ ಒಡೆದು ಒಳ ಪ್ರವೇಶಿಸಿದಾಗ ಟಿಪ್ಪುವಿನ ಮಿಲಿಟರಿ ಸಲಹಾಕಾರನಾಗಿದ್ದ ಫ್ರೆಂಚ್ ಅಧಿಕಾರಿ ಸುರಕ್ಷಿತ ಜಾಗಕ್ಕೆ ಓಡಿಹೋಗುವಂತೆ ಅಥವಾ ಶರಣಾಗುವಂತೆ ಟಿಪ್ಪುವಿಗೆ ಹೇಳಿದ. ಆದರೆ ‘ಒಂದು ದಿನ ಹುಲಿಯಂತೆ ಬದುಕುವುದು, ಸಾವಿರವರ್ಷ ಕುರಿಯಂತೆ ಬದುಕಿರುವುದಕ್ಕಿಂತ ಉತ್ತಮವೆಂದು ಟಿಪ್ಪು ಹೋರಾಟವನ್ನೇ ಆಯ್ದುಕೊಂಡ. ಹುಲಿಯಂತೆ ಬದುಕಬೇಕೆಂದು ತಮ್ಮ ರಾಜ ಬಯಸಿದ್ದಕ್ಕೆ ಮೈಸೂರಿನ ೧೧,೦೦೦ ಸೈನಿಕರು ಪ್ರಾಣ ತೆರಬೇಕಾಯಿತು. ಕಾವೇರಿ ಕೆಂಪಾಗಿ ಹರಿಯಿತು. ಟಿಪ್ಪು ಕುರಿತ ಕೃತಿಗಳು ‘ಅಪ್ರತಿಮ ದೇಶಭಕ್ತ ಟೀಪುಸುಲ್ತಾನ್’ ಕನ್ನಡದ ಹಿರಿಯ ಲೇಖಕರಾದ ಕೋ. ಚೆನ್ನಬಸಪ್ಪ ಅವರು ಸಂಗ್ರಹಿಸಿ, ಸಂಪಾದನೆ ಮಾಡಿರುವ ಕೃತಿ ‘ಅಪ್ರತಿಮ ದೇಶಭಕ್ತ ಟಿಪ್ಪುಸುಲ್ತಾನ್’. ಈ ಕೃತಿ ಸಂಶೋಧನೆಗೆ ಸಂಬಂಧಪಟ್ಚಿರುವುದು. ಆದುದರಿಂದಲೇ, ಇದರಲ್ಲಿ ಲೇಖಕರಾಗಿ ಗುರುತಿಸಿ ಕೊಳ್ಳದೆ, ಈ ಸಂಶೋಧನೆಯ ಹಿಂದಿರುವ ದಾಖಲೆಗಳಿಗೆ ಲೇಖಕರು ಕೃತಜ್ಞತೆ ಸಲ್ಲಿಸಿದ್ದಾರೆ. ಟೀಪು ಸುಲ್ತಾನ್‌ನ ಕುರಿತಂತೆ ರಾಜಕೀಯ ಕಾರಣಗಳಿಗೆ ಅಪಪ್ರಚಾರ ಮಾಡುತ್ತಿರುವ ಸಂಚುಗಳನ್ನು ಈ ಕೃತಿ ಬಯಲಿಗೆಳೆಯುತ್ತದೆ. ಟಿಪ್ಪು ಸುಲ್ತಾನ್ ತನ್ನ ಬದುಕಿನುದ್ದಕ್ಕೂ ಹೇಗೆ ‘ರಾಜಧರ್ಮ’ವನ್ನು ಪಾಲಿಸಿದ್ದ ಎನ್ನುವ ಸತ್ಯವನ್ನು ಈ ಕೃತಿ ತೆರೆದಿಡುತ್ತದೆ. ದಿ. ತೀ. ತಾ. ಶರ್ಮಾರ ಗ್ರಂಥವನ್ನು ಮುಂದಿಟ್ಟುಕೊಂಡು ಟಿಪ್ಪು ಸುಲ್ತಾನ್ ಹೇಗೆ ಮರಾಠರು ಸೇರಿದಂತೆ ಅನ್ಯರಿಂದ ಕನ್ನಡದ ಹಿಂದೂಗಳಿಗೆ ತೊಂದರೆಯಾದಾಗ ಅವರ ರಕ್ಷಣೆಗೆ ಧಾವಿಸಿದ ಎನ್ನುವುದನ್ನು ಮೊದಲ ಅಧ್ಯಾಯದಲ್ಲಿ ದಾಖಲಿಸುತ್ತಾರೆ. ಅಷ್ಟೇ ಅಲ್ಲ, ಟಿಪ್ಪು ಅಪ್ಪಟ ದೇಶಭಕ್ತ ಎನ್ನುವುದನ್ನು ದಾಖಲೆಗಳ ಸಹಿತ ಕೃತಿಯಲ್ಲಿ ನಿರೂಪಿಸುತ್ತಾರೆ. ಟಿಪ್ಪು ತನ್ನ ಆಳ್ವಿಕೆಯಲ್ಲಿ ರೈತರಿಗೆ, ದಲಿತರಿಗೆ ಹೇಗೆ ನೆರವಾದ ಎನ್ನುವ ಅಂಶವೂ ಈ ಕೃತಿಯಲ್ಲಿದೆ. ಹಾಗೆಯೇ ಟೀಪುವಿನ ಕುರಿತಂತೆ ಹರಡಿರುವ ‘ಮತಾಂತರ’ದ ಹಿಂದಿರುವ ರಾಜಕೀಯ ಏನು ಎನ್ನುವುದನ್ನು ಈ ಕೃತಿ ತೆರೆದಿಡುತ್ತದೆ. ‘ಬ್ರಿಟಿಷರಿಗೆ ನೆರವಾದವರ ಕತೆ’ ಇದರ ಕೊನೆಯ ಅಧ್ಯಾಯ. ಈ ಅಧ್ಯಾಯ ನಿಜವಾದ ದೇಶದ್ರೋಹಿಗಳು ಮತ್ತು ದೇಶಪ್ರೇಮಿಗಳು ಯಾರು ಎನ್ನುವ ಬೆಚ್ಚಿ ಬೀಳು ಸತ್ಯವನ್ನು ಹೇಳುವ ಪ್ರಯತ್ನ ಮಾಡುತ್ತದೆ. ಟಿಪ್ಪುವಿನ ದುರಂತಕ್ಕೆ ಕಾರಣರಾದ ದೇಶದ್ರೋಹಿಗಳನ್ನು ಈ ಅಧ್ಯಾಯ ತೆರೆದಿಡುತ್ತದೆ. ರಾಜಕೀಯ ವಿರೋಧಿಗಳನ್ನು ಟಿಪ್ಪು ಹಿಂಸಿಸಿರಬಹುದು. ಅದು ಅಂದಿನ ರಾಜಕೀಯ ಕಾಲಘಟ್ಟದಲ್ಲಿ ಅನಿವಾರ್ಯ. ಆದರೆ ಧರ್ಮದ ಹೆಸರಿನಲ್ಲಿ ಎಂದೂ ಟಿಪ್ಪು ಸುಲ್ತಾನ್ ಯಾರನ್ನೂ ಬೆದರಿಸಿರಲಿಲ್ಲ. ಜೊತೆಗೆ ಅವನು ಜಾತ್ಯತೀತನಾಗಿ ತನ್ನ ಕರ್ತವ್ಯವನ್ನು ಪಾಲಿಸಿದ ಎನ್ನುವುದನ್ನು ಈ ಕೃತಿ ಹೇಳುತ್ತದೆ. ನವಕರ್ನಾಟಕ ಪ್ರಕಾಶನ ಈ ಕೃತಿಯನ್ನು ಹೊರತಂದಿದೆ. ಮುಖಬೆಲೆ 40 ರೂ. ಧಾರಾವಾಹಿಯಾಗಿ ಗಿದ್ವಾನಿಯವರ - 'ದಿ ಸ್ವೋರ್ಡ್ ಆಫ್ ಟೀಪು ಸುಲ್ತಾನ್ ' ಎಂಬ ಕೃತಿಯು ಹಿಂದಿಯಲ್ಲಿ ಪ್ರಸಿದ್ದವಾಗಿದೆ. ಈ ಕೃತಿಯಲ್ಲಿ ಟೀಪ್ಪು ಒಬ್ಬ ಅಪ್ರತಿಮ ದೇಶಪ್ರೇಮಿ ಎಂಬಂತೆ ಚಿತ್ರಿಸಲಾಗಿದೆ. ಇದು ಹಿಂದಿ ಧಾರವಾಹಿಯಾಗಿಯೂ ಪ್ರಸಿದ್ದಿ ಪಡೆದಿತ್ತು. ಸಂಜಯಖಾನ್ ಎಂಬ ನಟ ಟಿಪ್ಪುವಿನ ಪಾತ್ರ ಮಾಡಿದ್ದನು. ಆ ಧಾರವಾಹಿಯ ಸಂದರ್ಭದಲ್ಲಿ ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬೆಂಕಿ ಅಪಘಾತಕ್ಕೆ ಒಳಗಾಗಿ, ಅಪಾರ ಸಾವು-ನೋವು ಸಂಭವಿಸಿತ್ತು. ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯು ರಾಷ್ಟ್ರೀಯ ಹಬ್ಬವಾಗಲಿ ಮತ್ತು ಆ ದಿವಸವನ್ನು ರಾಷ್ಟ್ರೀಯ ರಜಾ ದಿನವೆಂದು ಘೋಸಿಸಬೇಕೆಂದು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ‍್ ಇಂದಿಲ್ಲಿ ಹೇಳಿದರು. ಅವರು ಇಲ್ಲಿ ಇಂದು ತಮ್ಮ ಪಕ್ಷದ ವತಿಯಿಂದ ಆಯೋಜಿಸಿದ್ದ ಟಿಪ್ಪು ಸುಲ್ತಾನ್‍ರ ೨೬೩ನೆಯ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಅಭಿಪ್ರಾಯಪಟ್ಟರು. ಟೀಪು ಸುಲ್ತಾನ್ ಅತಿ ದೊಡ್ಡ ದೇಶ ಭಕ್ತ ಮತ್ತು ನಮ್ಮ ದೇಶಕ್ಕಾಗಿ ಹೋರಾಟ ಮಾಡಿ ಪ್ರಾಣ ಬಿಟ್ಟರು. ಆದರೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಈ ಹುತಾತ್ಮನ ದೇಶ ಭಕ್ತಿಯನ್ನು ನಿರ್ಲಕ್ಷಿಸಿದ್ದಾರೆ. ಟಿಪ್ಪು ಸುಲ್ತಾನ್ ರ ಪ್ರತಿಮೆಯನ್ನು ಸಂಸತ್ತಿನ ಮತ್ತು ವಿಧಾನ ಸಭೆಯ ಎದುರುಗಡೆ ಸ್ಥಾಪಿಸಬೇಕೆಂದು ಅವರು ಅಭಿಪ್ರಾಯ ಪಟ್ಟರು. ಟಿಪ್ಪುವಿನ ಹಲವಾರು ಐತಿಹಾಸಿಕ ಸ್ಥಳಗಳು ಇಂದು ನಿರ್ಲಕ್ಶಕ್ಕೊಳಗಾಗಿದೆ. ಅವುಗಳಿಗೆ ಯಾವುದೊಂದು ರಕ್ಷಣೆಯನ್ನು ಸರಕಾರ ಒದಗಿಸಿಲ್ಲ. ಇದಕ್ಕೆ ಎರಡು ಸರಕಾರಗಳ ನಿರ್ದಾಕ್ಷಣ್ಯವೆ ಸಾಕ್ಷಿ. ಆದುದರಿಂದ ಈ ಕೂಡಲೇ ಸರಕಾರಗಳು ಎಚ್ಚೆತ್ತು ಟಿಪ್ಪುವಿನ ಐತಿಹಾಸಿಕ ಸ್ಮಾರಕಾಗಳಿಗೆ ರಕ್ಷಣೆ ಕೊಡಬೇಕೆಂದು ಹೇಳಿದರು ಇತ್ತೀಚೆಗೆ ನಡೆದ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಗಲಭೆಯಾಗಿ ಇಬ್ಬರು ಸಾವನ್ನಪ್ಪಿದರು. ವಿವಾದ ಟಿಪ್ಪು ಸುಲ್ತಾನನ ಜಯಂತಿ ವಿವಾದ ಕರ್ನಾಟಕ ಸರಕಾರ 2015ನೇ ಇಸವಿಯ ನವೆಂಬರ್ 10ರಂದು ಟಿಪ್ಪು ಸುಲ್ತಾನನ ಜಯಂತಿಯನ್ನು ಆಚರಿಸಿತು. ಈ ಸರಕಾರೀ ಕಾರ್ಯಕ್ರಮವನ್ನು ನಡೆಸಲು ಪ್ರತಿ ಜಿಲ್ಲೆಗೆ 50 ಸಾವಿರ ಮತ್ತು ಪ್ರತಿ ತಾಲೂಕಿಗೆ 25 ಸಾವಿರ ರುಪಾಯಿಗಳಂತೆ ಒಟ್ಟು 80 ಲಕ್ಷವನ್ನು ವ್ಯಯಿಸಲಾಯಿತು. ನಾಡಹಬ್ಬ ದಸರಾ ಆಚರಿಸಲು ದುಡ್ಡಿಲ್ಲದೆ ಪರದಾಡುತ್ತಿದ್ದ ಸರಕಾರಕ್ಕೆ ಟಿಪ್ಪು ಜಯಂತಿ ಎಂಬ ಹೊಸ ಸಂಪ್ರದಾಯವನ್ನು ಹುಟ್ಟುಹಾಕಲು ಇಷ್ಟೊಂದು ದುಡ್ಡು ಎಲ್ಲಿಂದ ಸಿಕ್ಕಿತು ಎನ್ನುವುದು ಯಕ್ಷಪ್ರಶ್ನೆ! ಇರಲಿ, ಈ ಜಯಂತಿಯಾದರೂ ಸುಸೂತ್ರವಾಗಿ ನಡೆದಿದ್ದರೆ; ಒಂದಷ್ಟು ಒಳ್ಳೆಯ ಕೆಲಸಗಳು ಆ ಮೂಲಕವಾದರೂ ಆಗಿದ್ದರೆ ರಾಜ್ಯದ ಜನ ನೆಮ್ಮದಿ ಕಾಣುತ್ತಿದ್ದರೋ ಏನೋ. ಆದರೆ, ಈ ಜಯಂತಿ ಜನರ ಕಾರ್ಯಕ್ರಮವಾಗದೆ ಕೇವಲ “ಸರಕಾರಿ ಆಚರಣೆ” ಮಾತ್ರವೇ ಆಗಿ ಉಳಿಯಿತು. ಸರಕಾರದ ತನ್ನ ನಡೆಯನ್ನು ಸಮರ್ಥಿಸಿಕೊಳ್ಳುತ್ತ ಒಬ್ಬ ಬುದ್ಧಿಜೀವಿ, “ಈಗಾಗಲೇ ಹಲವು ಜಾತಿ-ಕೋಮುಗಳ ಜನರಿಗೆ ಬೇಕಾದ ಜಯಂತಿಗಳಿವೆ. ಆದರೆ ಮುಸ್ಲಿಮರಿಗೆ ಹೇಳಿಕೊಳ್ಳುವಂಥ ಯಾವುದೇ ಸರಕಾರೀ ಕಾರ್ಯಕ್ರಮ ಇರಲಿಲ್ಲ. ಈಗ ಶುರು ಮಾಡಿರುವ ಜಯಂತಿಯನ್ನು ಆ ನಿಟ್ಟಿನಲ್ಲಿ ಯೋಚಿಸಿ ಸ್ವಾಗತಿಸಬೇಕು” ಎಂಬ ಮಾತುಗಳನ್ನು ಆಡಿದರು. ಜಯಂತಿಗಳನ್ನು ರಾಜ್ಯದಲ್ಲಿರುವ ವಿವಿಧ ಜಾತಿ-ಪಂಗಡಗಳನ್ನು ಮೆಚ್ಚಿಸಲಿಕ್ಕಾಗಿ ಆಚರಿಸಲಾಗುತ್ತದೆ ಎಂಬ ಸತ್ಯ ಅವರ ಈ ಮಾತುಗಳ ಮೂಲಕ ಹೊರಬಿದ್ದಿದೆ. ಟಿಪ್ಪು ಜಯಂತಿಯನ್ನು ಆಚರಿಸಿರುವುದು ಕೇವಲ ಮುಸ್ಲಿಮ್ ಸಮುದಾಯವನ್ನು ಮೆಚ್ಚಿಸಲಿಕ್ಕಾಗಿ ಎಂಬ ಸರಕಾರದ ಅಜೆಂಡವನ್ನು ಸರಕಾರೀ ಸಾಹಿತಿ ಬಾಯಿತಪ್ಪಿ ಹೇಳಿಬಿಟ್ಟಿದ್ದಾರೆ! ಟಿಪ್ಪು ಜಯಂತಿ ಒಂದಲ್ಲ ಹಲವು ವಿವಾದಗಳಿಗೆ ಕಾರಣವಾಯಿತು. ಯಾವುದೇ ಒಂದು ವ್ಯಕ್ತಿಯ ಹುಟ್ಟುಹಬ್ಬದ ಆಚರಣೆಯ ವಿಷಯಕ್ಕೆ ಮೂರು ಹೆಣಗಳು ಉರುಳಿದ ಚರಿತ್ರೆ ಕರ್ನಾಟಕದಲ್ಲಿ ಇರಲಿಲ್ಲ. ಟಿಪ್ಪು ಜಯಂತಿಯ ಆಸುಪಾಸು ಸಂಪೂರ್ಣ ವಿರುದ್ಧ ಕ್ರಿಯೆ, ಪ್ರತಿಕ್ರಿಯೆಗಳನ್ನು ಈ ನಾಡು ಕಂಡಿತು. ಮೈಸೂರು ಆಳಿದ ಅರಸನ ಆರಾಧನೆ, ನಿಂದನೆ ಎರಡೂ ನಡೆದವು. ಒಂದು ವರ್ಗವು ಟಿಪ್ಪುವನ್ನು ಅನನ್ಯ ದೇಶಪ್ರೇಮಿ, ಸೆಕ್ಯುಲರ್ ರಾಜ, ಜಮೀನ್ದಾರಿ ಪದ್ಧತಿ ಕೊನೆಗೊಳಿಸಲೆತ್ನಿಸಿದ ಕ್ರಾಂತಿಕಾರಿ ಸುಲ್ತಾನ, ಶೃಂಗೇರಿ-ನಂಜನಗೂಡು-ಮೇಲುಕೋಟೆ ಮುಂತಾದ ದೇವಾಲಯಗಳಿಗೆ ದತ್ತಿಕಾಣಿಕೆ ನೀಡಿದ ಸಹಿಷ್ಣುವೆಂದು ಬಿಂಬಿಸಿದರೆ; ಮತ್ತೊಂದು ವರ್ಗವು ಅವನು ಸೋತ ಪ್ರದೇಶಗಳಲ್ಲಿ ಮಾಡಿದ ಲೂಟಿ ಮತ್ತು ನಾಶವನ್ನು ನೆನಪಿಸಿಕೊಂಡು ಕಾಫಿರರನ್ನು ಸೋಲಿಸಿ ಹಿಂಸಿಸಿ ಇಸ್ಲಾಂ ಸಾಮ್ರಾಜ್ಯ ಕಟ್ಟಹೊರಟ ಮತಾಂಧ ಎಂದು ಜರೆಯಿತು. ಭಿನ್ನ ಅಭಿಪ್ರಾಯಗಳು ಪ್ರಜಾಪ್ರಭುತ್ವದಲ್ಲಿ ಇರುವಂಥವೇ ಎಂದಿಟ್ಟುಕೊಂಡು ವಿರುದ್ಧ ಪ್ರತಿಕ್ರಿಯೆಗಳನ್ನು ಅತ್ತ ಸರಿಸುವಂತಿಲ್ಲ. ಧಾರ್ಮಿಕ ಅಸಹನೆ ಉತ್ತುಂಗ ಮುಟ್ಟಿರುವ ೨೦೧೫ರಲ್ಲಿ ಕನ್ನಡಿಗ ಮುಸ್ಲಿಮರಿಗೆ ಟಿಪ್ಪು ಸುಲ್ತಾನ್ ಮಾದರಿ ನಾಯಕನ ಗುಣಗಳ ಹೊಂದಿದ್ದನೆ? ವಸಾಹತುಶಾಹಿ ಕಾಲದ ರಾಜನಿಗೆ ಪ್ರಜಾಪ್ರಭುತ್ವ ಭಾರತಕ್ಕೆ ಮಾದರಿಯಾಗುವ ಸೆಕ್ಯುಲರ್ ಲಕ್ಷಣ ಗಳಿದ್ದವೆ? ಮುಸ್ಲಿಂ ಸಮುದಾಯದ ಬದುಕು ಸುಧಾರಿಸುವುದು ಆಳುವವರ ಇಂಥ ನಡೆಗಳಿಂದಲೇ? ಎಂದು ವಸ್ತುನಿಷ್ಠವಾಗಿ ನೋಡಬೇಕಾದ ಅವಶ್ಯಕತೆಯಿದೆ. ಏಕೆಂದರೆ ಕಾಲದ ನಡಿಗೆಯ ಯಾವುದೇ ಒಂದು ಬಿಂದುವಿನಲ್ಲಿ ಇಟ್ಟ ಹೆಜ್ಜೆ ಮತ್ತು ಆಯ್ಕೆ ತಪ್ಪಾದರೆ ಅದರ ಜವಾಬ್ದಾರಿಗಳನ್ನು ಆ ಕಾಲದ ಎಲ್ಲರೂ ಸಮವಾಗಿ ಹೊತ್ತುಕೊಳ್ಳಬೇಕಾಗುತ್ತದೆ. ವಿವಾದದ ಅಲೆ:೧, ಫ್ರೆಂಚರನ್ನು ಕರೆದವನು ಟಿಪ್ಪು ಸುಲ್ತಾನನ ಕತೆಯನ್ನು ಪ್ರಾಥಮಿಕ ಶಾಲೆಯ ಚರಿತ್ರೆ ಪುಸ್ತಕದಲ್ಲಿ ನಾವೆಲ್ಲರೂ ಓದಿದವರೇ. ಟಿಪ್ಪು ಒಬ್ಬ ಮಹಾನ್ ಹೋರಾಟಗಾರನಾಗಿದ್ದ; ಅವನಿಗೆ ಮೈಸೂರಿನ ಹುಲಿ ಎಂಬ ಬಿರುದಿತ್ತು; ಅವನ ಕಾಲದಲ್ಲಿ ನಮ್ಮ ರಾಜ್ಯ ಸರ್ವಧರ್ಮಗಳ ಶಾಂತಿ-ಸಾಮರಸ್ಯಗಳ ಬೀಡಾಗಿತ್ತು; ಆತ ಹುಲಿಯ ಜೊತೆ ಕಾದಾಡಿದ್ದ; ಬ್ರಿಟಿಷರ ವಿರುದ್ಧ ಯುದ್ಧದಲ್ಲಿ ಹೋರಾಡುತ್ತ ವೀರಮರಣವನ್ನಪ್ಪಿದ – ಮುಂತಾದ ಕತೆಗಳನ್ನು ನಾವು ಪಠ್ಯದಲ್ಲಿ ಓದಿದ್ದೆವು. ಕನ್ನಡನಾಡಿನ ಜನರ ರಕ್ಷಣೆ ಮಾಡುತ್ತಿದ್ದ ಮೈಸೂರಿನ ಒಡೆಯರ ಒಡಕು ಆಡಳಿತದಿಂದ, ಒಳ ಜಗಳದಿಂದ ಮತ್ತು ಕುಟುಂಬ ಕಲಹದಿಂದಾಗಿ ಹೈದರ್ ಮೈಸೂರನ್ನು ಆಳುವಂತಾಯಿತು. ದಕ್ಷಿಣ ಭಾರತದಲ್ಲಿ ಪ್ರಬಲನಾದ ಹೈದರಾಲಿಯ ಮಗ ಟಿಪ್ಪು, ಬ್ರಿಟಿಷರ ವಿರುದ್ಧ ಹೋರಾಡಿದ್ದು ಅವರು ನಿಜಾಮ ಮತ್ತು ಮೈಸೂರಿನ ಒಡೆಯರ ಜೊತೆ ಹೊಂದಾಣಿಕೆ ಮಾಡಿಕೊಂಡು ತನ್ನ ವಿರುದ್ಧ ತಿರುಗಿಬಿದ್ದರು ಎಂಬ ಕಾರಣಕ್ಕೆ ಮಾತ್ರ. 1797ರ ಏಪ್ರಿಲ್ 21ರಂದು ಫ್ರೆಂಚರಿಗೆ ಪತ್ರ ಬರೆಯುವ ಟಿಪ್ಪು, ಅವರ ಬೆಂಬಲ ಸಿಕ್ಕರೆ ಬ್ರಿಟಿಷರನ್ನು ಓಡಿಸಿ ಇಡೀ ದೇಶವನ್ನು ಲೂಟಿ ಹೊಡೆಯಬಹುದು ಎಂಬ ಪ್ರಲೋಭನೆ ಒಡ್ಡುತ್ತಾನೆ. ಬ್ರಿಟಿಷರಿಂದ ಬಂಧನಕ್ಕೊಳಗಾಗಿ ಸೆರೆಮನೆವಾಸಿಯಾಗಿದ್ದ ಫ್ರೆಂಚ್ ನಾಯಕ ನೆಪೋಲಿಯನ್ ಬೋನಪಾರ್ಟೆಯ ಜೊತೆ ಟಿಪ್ಪುವಿಗೆ ಪತ್ರ ವ್ಯವಹಾರ ಇತ್ತು. ಫ್ರೆಂಚರು ಟಿಪ್ಪುವಿನೊಡನೆ ಸೇರಿ ದಕ್ಷಿಣ ಭಾರತದ ನಿಜಾಮ, ಮತ್ತು ಮರಾಠರನ್ನು ಸೋಲಿಸಿ ಇಲ್ಲಿ ಮೇಲುಗೈ ಸಾಧಿಸುವ ಕನಸು ಕಂಡರು. ಬ್ರಿಟಿಷರ ವಿರುದ್ಧ ಹೋರಾಡಲು, ಮೈಸೂರನ್ನು ಬ್ರಿಟಿಷರಿಂದ ರಕ್ಷಿಸಲು ಫ್ರೆಂಚರ ಸಹಾಯ ಬೇಡಿದ. ಅವನ ಹೆಚ್ಚಿನೆಲ್ಲ ಶ್ರಮ ವ್ಯರ್ಥವಾದದ್ದು ತನ್ನ ಸುತ್ತಲಿನ ರಾಜ್ಯಗಳ ಮೇಲೆ ದಂಡೆತ್ತಿ ಹೋಗುವುದರಲ್ಲಿ; ಅಲ್ಲಿನ ಸಾವಿರಾರು ಪ್ರಜೆಗಳನ್ನು ಇಸ್ಲಾಂ ಮತಕ್ಕೆ ಮತಾಂತರಿಸುವುದರಲ್ಲಿ ಮತ್ತು ತನ್ನ ಮಾತು ಕೇಳದವರಿಗೆ ಬಗೆಬಗೆಯ ಶಿಕ್ಷೆಗಳನ್ನು ಕೊಟ್ಟು ಜೀವ ತೆಗೆಯುವುದರಲ್ಲಿ. ಭಾರತ ಎಂಬ ಏಕರಾಷ್ಟ್ರದ ಕಲ್ಪನೆಯೇ ಇನ್ನೂ ಮೊಳೆತಿರದ ಕಾಲದಲ್ಲಿದ್ದ ಟಿಪ್ಪು, ಸ್ವಾತಂತ್ರ್ಯ ಹೋರಾಟಗಾರನೆಂದು ಕರೆಸಿಕೊಳ್ಳಲು ಹೇಗೆ ಯೋಗ್ಯನಾಗುತ್ತಾನೆ ಎಂಬ ಪ್ರಶ್ನೆಯೂ ಇದೆ. ಆತ ಕನ್ನಡದ ಕಂದನಾಗಿದ್ದ ಎಂಬುದಕ್ಕೂ ಇತಿಹಾಸದಲ್ಲಿ ಹೆಚ್ಚು ಆಧಾರಗಳು ಸಿಗುವುದಿಲ್ಲ. ಟಿಪ್ಪು ತನ್ನ ಆಡಳಿತವಿರುವ ಎಲ್ಲಾ ಪ್ರದೇಶಗಳಲ್ಲಿ ಉರ್ದು ಮತ್ತು ಫಾರಸಿ/ಪರ್ಶಿಯನ್ ಭಾಷೆಗಳನ್ನು ಖಾಯಂ ಮಾಡಿದ. ತನ್ನ ರಾಜ್ಯದ ವ್ಯವಹಾರಗಳು ಫಾರಸಿ ಭಾಷೆಯಲ್ಲೇ ಇರಬೇಕೆಂದು ಕಟ್ಟಪ್ಪಣೆ ಹೊರಡಿಸಿದ. ಅತ್ಯಂತ ಕಟ್ಟಾ ಮತೀಯನಾಗಿದ್ದ ಟಿಪ್ಪು ತನ್ನ ಆಡಳಿತ ಕಾಲದಲ್ಲಿ ಹಲವು ಊರುಗಳ ಹೆಸರುಗಳನ್ನು ಬದಲಾಯಿಸಿದ. ಮಂಗಳೂರು ಜಲಲಾಬಾದ್ ಆಯಿತು. ಮೈಸೂರು – ನಝರಾಬಾದ್, ಕಣ್ಣಾನೂರು – ಕುಸನಬಾದ್, ಗುಟ್ಟಿ – ಫೈಜ್ ಹಿಸ್ಸಾರ್, ಧಾರವಾಡ – ಖುರ್ಷಿದ್ ಸವಾಡ್, ದಿಂಡಿಗಲ್ – ಕಲಿಖಾಬಾದ್, ರತ್ನಗಿರಿ – ಮುಸ್ತಫಾಬಾದ್, ಕಲ್ಲಿಕೋಟೆ – ಇಸ್ಲಮಾಬಾದ್.. ಹೀಗೆ ಮೈಸೂರಿನ ಸುತ್ತಮುತ್ತಲಿನ ಜಾಗಗಳಿಗೆಲ್ಲ ಟಿಪ್ಪು ಮುಸ್ಲಿಮ್ ಹೆಸರುಗಳನ್ನು ಇಡುತ್ತಾ ಹೋದ. ಟಿಪ್ಪು ಊರುಗಳ ಹೆಸರುಗಳನ್ನು ಬದಲಿಸಿದ್ದು ಮಾತ್ರವಲ್ಲ; ದೂರವನ್ನು ಅಳೆಯುವ ಅಳತೆ ಮತ್ತು ಮಾನದಲ್ಲಿಯೂ ಇಸ್ಲಾಂ ಮತವನ್ನು ತುರುಕಿದ. ಖುರಾನಿನ ಒಂದು ಸಾಲು (ಕಲ್ಮಾ) ಇಪ್ಪತ್ತನಾಲ್ಕು ಅಕ್ಷರಗಳನ್ನು ಹೊಂದಿದೆಯೆಂಬ ಕಾರಣಕ್ಕೆ 24 ಅಂಗುಲಗಳ ಉದ್ದವನ್ನು ಮೂಲಮಾನವಾಗಿ ಇಟ್ಟುಕೊಂಡ. ಉಳಿದೆಲ್ಲ ಅಳತೆಗಳೂ ಇದಕ್ಕೆ ತಕ್ಕಂತೆ ಬದಲಾದವು. ಪ್ರವಾದಿ ಮುಹಮ್ಮದರು ಹುಟ್ಟಿದ ವರ್ಷದಿಂದ ಆರಂಭಿಸಿ ಹೊಸ ಶಕೆಯೊಂದನ್ನು ಆರಂಭಿಸಿ, ಹೊಸ ಬಗೆಯ ಪಂಚಾಂಗವನ್ನು ಟಿಪ್ಪು ಜಾರಿಗೆ ತಂದ. ಸೌರಮಾನ ಪದ್ಧತಿಯನ್ನು ಕೈಬಿಟ್ಟು ಚಾಂದ್ರಮಾನ ಪದ್ಧತಿ ಅನುಸರಿಸಲು ಆದೇಶ ಹೊರಡಿಸಲಾಯಿತು. ಟಿಪ್ಪು ಪ್ರಾರಂಭಿಸಿದ ವರ್ಷದಲ್ಲಿ 354 ದಿನಗಳಿದ್ದವು. ವರ್ಷಗಳಿಗೆ ಅಹಂದ್, ಅಬ್, ಝಾ, ಬಾಬ್ ಮುಂತಾದ ಇಸ್ಲಾಮಿಕ್ ಹೆಸರುಗಳನ್ನು ಕೊಡಲಾಯಿತು. ಇನ್ನು, ಹೆಚ್ಚಾಗಿ ಎಲ್ಲರೂ ಭಾವಿಸುವುದು ಹುಲಿಯೊಂದಿಗೆ ಕಾದಾಡಿ ಅದನ್ನು ಕೊಂದದ್ದರಿಂದಾಗಿ ಅವನಿಗೆ ಮೈಸೂರು ಹುಲಿ ಎಂಬ ಬಿರುದು ಬಂದಿದೆಯೆಂದು. ಆದರೆ, ಟಿಪ್ಪು ಎಂದೂ ಹುಲಿಗಳೊಂದಿಗೆ ಕಾದಾಡಿದ ಉದಾಹರಣೆ ಇಲ್ಲ! ಪರಂಗಿಯೊಬ್ಬನ ಮೇಲೆರಗಿ ಕೂತ ಹುಲಿಯ ಆಟಿಕೆ ಅವನ ಬಳಿ ಇತ್ತು ಅಷ್ಟೆ! ಅದನ್ನು ಆತ ಚಿಕ್ಕ ಮಕ್ಕಳಂತೆ ಪ್ರೀತಿಯಿಂದ ತನ್ನ ಜೊತೆಗಿಟ್ಟುಕೊಂಡಿದ್ದ. ಆ ಕಾಲದಲ್ಲಿ ಕರ್ನಾಟಕದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಿದ್ದುದರಿಂದ ಆತನಿಗೆ ಅದನ್ನೇ ತನ್ನ ರಾಜಚಿಹ್ನೆಯಾಗಿ ಇಟ್ಟುಕೊಳ್ಳುವ ಹಂಬಲ ಮೂಡಿರಬಹುದು. ಅವನ ಕತ್ತಿಯಲ್ಲಿ ಹುಲಿಯ ಉಲ್ಲೇಖ ಇತ್ತು. ಹುಲಿಯ ಮುಖದ ಅಚ್ಚು ಇರುವ ಸಿಂಹಾಸನವನ್ನು ಬಳಸುತ್ತಿದ್ದ. ಹುಲಿಯ ಪಟ್ಟೆಗಳ ವಿನ್ಯಾಸ ಇರುವ ಸಮವಸ್ತ್ರಗಳನ್ನು ತನ್ನ ಸೈನಿಕರಿಗೆ ಕೊಟ್ಟಿದ್ದ. ಜೊತೆಗೆ, ತನ್ನ ಅರಮನೆಯಲ್ಲಿ ಒಂದಷ್ಟು ಹುಲಿಗಳನ್ನು ಸಾಕಿಕೊಂಡಿದ್ದ. ಈ ಎಲ್ಲ ಕಾರಣಗಳಿಂದ ಅವನಿಗೆ ಶೇರ್-ಇ-ಮೈಸೂರ್ ಎಂಬ ಬಿರುದನ್ನು ಅವನಿಗೆ ಕೊಟ್ಟಿರಬಹುದು. ಯಮಸದೃಶ ಮತಾಂತರಿ ಟಿಪ್ಪುವಿನ ದೌರ್ಜನ್ಯಗಳ ಮಾಹಿತಿಗಳು ನಮಗೆ ಸಿಕ್ಕುವುದು ಆ ಕಾಲದಲ್ಲಿ ಮೈಸೂರು ರಾಜ್ಯಕ್ಕೆ ಭೇಟಿ ಕೊಟ್ಟ ಪರದೇಶ ಗಳ ಇತಿಹಾಸ ತಜ್ಞರಿಂದ. ಜಗತ್ಪ್ರಸಿದ್ಧ ಪೋರ್ತುಗೀಸ್ ಯಾತ್ರಿಕ ಬಾರ್ತೊಲೋಮಿಯೋ ತನ್ನ “ವೊಯೇಜ್ ಟು ಈಸ್ಟ್ ಇಂಡೀಸ್” ಎಂಬ ಕೃತಿಯಲ್ಲಿ ಬರೆಯುವ ಕೆಲವು ಸಾಲುಗಳು: “ಟಿಪ್ಪು ಒಂದು ಆನೆಯ ಮೇಲೆ ಕೂತು ಸವಾರಿ ಮಾಡುತ್ತಿದ್ದ. ಪ್ಪುವಿನ ಕಾಲದಲ್ಲಿ ಮಂಗಳೂರಿಗೆ ಬ್ರಿಟಿಷ್ ಅಧಿಕಾರಿಯಾಗಿ ನೇಮಕವಾಗಿದ್ದ ಕರ್ನಲ್ ಫುಲ್ಲೆರ್ಟನ್ 1783ರಲ್ಲಿ ಟಿಪ್ಪುಸೈನ್ಯ ತೋರಿದ ಹಿಂಸೆಯ ಭೀಭತ್ಸವನ್ನು ಹೀಗೆ ದಾಖಲು ಮಾಡುತ್ತಾನೆ: ಟಿಪ್ಪುವಿನ ಸೈನಿಕರು ಪ್ರತಿದಿನ ಹತ್ತಿಪ್ಪತ್ತು ಜನ ಬ್ರಾಹ್ಮಣರ ತಲೆಗಳನ್ನು ಕಡಿದು ತಂದು ಝಮೊರಿನ್ ಕೋಟೆಯ ಆಸುಪಾಸಿನಲ್ಲಿ ತೂಗು ಹಾಕುತ್ತಿದ್ದರು. ಈ ಕ್ರೌರ್ಯವನ್ನು ಕಂಡು ಸಹಿಸಲಾಗದೆ; ಇನ್ನಷ್ಟು ಬ್ರಾಹ್ಮಣರ ಜೀವ ಹೋಗಬಾರದೆಂಬ ಉದ್ಧೇಶದಿಂದ ಝಮೊರಿನ್ ರಾಜ ಆ ಪ್ರದೇಶಗಳನ್ನು ಬಿಟ್ಟುಕೊಟ್ಟು ಕೇರಳದ ದಕ್ಷಿಣಭಾಗಕ್ಕೆ ಹೋದ. ವಿವಾದದ ಅಲೆ:೨, ಟಿಪ್ಪುವಿನ ಕೃತ್ಯಗಳ ವಿವರಗಳು ಸಿಗುವ ಇನ್ನೊಂದು ಮೂಲ “ಮಲಬಾರ್ ಮ್ಯಾನುಯೆಲ್” ಎಂಬ ಗ್ರಂಥ. ಇದನ್ನು ಬರೆದ ವಿಲಿಯಂ ಲೋಗನ್, ಬ್ರಿಟಿಷ್ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಬ್ಬ ಸ್ಕಾಟಿಷ್ ಅಧಿಕಾರಿ. ಈತ ಕೇರಳ ಮತ್ತು ತಮಿಳುನಾಡುಗಳಲ್ಲಿ ಸುಮಾರು ಇಪ್ಪತ್ತು ವರ್ಷ ಮ್ಯಾಜಿಸ್ಟ್ರೇಟ್ ಮತ್ತು ನ್ಯಾಯಾಧೀಶನಾಗಿ ಕೆಲಸ ಮಾಡಿದ. ನಂತರ ಇವನನ್ನು ಮಲಬಾರ್ ಪ್ರಾಂತ್ಯದ ಕಲೆಕ್ಟರ್ ಆಗಿ ನೇಮಿಸಿ ಕಳಿಸಲಾಯಿತು. ಭಾರತದಲ್ಲಿ ತನ್ನ ಬಹುವರ್ಷಗಳನ್ನು ಕಳೆದದ್ದರಿಂದ ಲೋಗನ್ ಮಲಯಾಳಂ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ನಿರರ್ಗಳವಾಗಿ ಮಾತಾಡಬಲ್ಲನಾಗಿದ್ದ. ತನ್ನ ಪುಸ್ತಕದಲ್ಲಿ ಆತ, ಟಿಪ್ಪು ಮಲಬಾರಿನಲ್ಲಿ ಮಾಡಿದ ಮತಾಂತರದ ಅತ್ಯಾಚಾರಗಳನ್ನು ತಣ್ಣಗಿನ ಭಾಷೆಯಲ್ಲಿ ನಿರ್ವಿಕಾರ ಸಂತನಂತೆ ಹೇಳುತ್ತಾ ಹೋಗುತ್ತಾನೆ. ಅವನು ಹೇಳುವ ವರ್ಣನೆಗಳನ್ನು ಕೇಳಿದರೆ ಹೊಟ್ಟೆಯಲ್ಲಿ ಛಳುಕು ಮೂಡುತ್ತದೆ. “ಕಲ್ಲಿಕೋಟೆಯಿಂದ ಇಪ್ಪತ್ತನೇ ಪತ್ರ ಬಂತು. ಎಂದಿನಂತೆ – ಇಷ್ಟಿಷ್ಟು ಜನ ಬ್ರಾಹ್ಮಣರನ್ನು ಹಿಡಿದುಹಾಕಲಾಯಿತು. ಅವರನ್ನು ಬಲಾತ್ಕಾರವಾಗಿ ಮುಂಜಿ ಮಾಡಿಸಿ ದನದ ಮಾಂಸ ತಿನ್ನಿಸಿ ಮುಸಲ್ಮಾನರಾಗಿ ಮಾಡಲಾಯಿತು – ಎಂಬ ಒಕ್ಕಣೆ ಇತ್ತು ಅದರಲ್ಲಿ. ಈ ಇಪ್ಪತ್ತನೇ ಪತ್ರದಲ್ಲಿ 200 ಮಂದಿ ಬ್ರಾಹ್ಮಣರನ್ನು ಹಿಡಿಯಲಾಯಿತು ಎಂಬ ಮಾಹಿತಿ ಇತ್ತು.” ಈ ಪತ್ರಗಳು ನಿರಂತರವಾಗಿ ಕೇರಳದ ಸೈನಿಕರಿಂದ ಟಿಪ್ಪುವಿಗೆ ರವಾನೆಯಾಗುತ್ತಿದ್ದವು. ನೂರಿನ್ನೂರು ಜನರನ್ನು ಹಿಡಿಯುವುದು; ಅವರನ್ನು ಸಾಮೂಹಿಕವಾಗಿ ಮುಂಜಿ ಮಾಡಿಸಿ, ಮಾಂಸ ತಿನ್ನಿಸುವುದು ಅವ್ಯಾಹತವಾಗಿ ನಡೆಯುತ್ತಿತ್ತು. ತಾವು ಎಷ್ಟೆಷ್ಟು ಜನರನ್ನು ಹೀಗೆ ಮುಸಲ್ಮಾನರಾಗಿ ಮಾಡಿದೆವು ಎನ್ನುವ ವಿವರಗಳನ್ನು ಅವರು ಟಿಪ್ಪುವಿಗೆ ತಲುಪಿಸಬೇಕಾಗಿತ್ತು. ಅದೇ ಪುಸ್ತಕದಲ್ಲಿ ಬರುವ ಇನ್ನೊಂದು ಭಾಗ ನೋಡಿ: “ಕುಟ್ಟಿಪುರಂ ಎನ್ನುವುದು ಕಡತ್ತನಾಡ್ ರಾಜವಂಶದ ರಾಜಧಾನಿ. ಇಲ್ಲಿಗೆ ಟಿಪ್ಪು ದಾಳಿ ಮಾಡುವ ಸೂಚನೆ ಸಿಕ್ಕಿತು. ಹಲವು ವರ್ಷಗಳಿಂದ ಆತ ಈ ಊರನ್ನು ವಶಪಡಿಸಿಕೊಳ್ಳಲು ಹಂಚಿಕೆ ಹಾಕುವುದೂ ಇಲ್ಲಿನ ಜನ ಪ್ರಬಲವಾದ ಪ್ರತಿರೋಧ ಒಡ್ಡುವುದೂ ನಡೆದೇ ಇತ್ತು. ಆದರೆ ಟಿಪ್ಪು ಹಲವು ಅಕ್ರಮ ಮಾರ್ಗಗಳನ್ನು ಬಳಸಿ, ಇಲ್ಲಿನ ಯೋಧರ ಸಂಖ್ಯೆ ಕಡಿಮೆಯಾಗುವಂತೆ ನೋಡಿಕೊಂಡಿದ್ದ. ಕೊನೆಗೆ ಅಲ್ಲಿ 2000 ನಾಯರ್ ಸೈನಿಕರು ಮಾತ್ರ ಉಳಿದುಕೊಂಡಿದ್ದರು. ಆದರೂ ಅವರು ವೀರಾವೇಶದಿಂದ ಹೋರಾಡುತ್ತಿದ್ದರು. ಎಷ್ಟು ಧೈರ್ಯದಿಂದ ಕಾದಿದರೂ ಟಿಪ್ಪುವಿನ ಮಹಾಸೈನ್ಯದೆದುರು ಈ ಎರಡು ಸಾವಿರ ಮಂದಿ ಏನೂ ಮಾಡುವಂತಿರಲಿಲ್ಲ. ಟಿಪ್ಪುವಿನ ಸೈನ್ಯ ಕೋಟೆಯನ್ನು ವಶಪಡಿಸಿಕೊಂಡೇಬಿಟ್ಟಿತು. ನಾಯರ್‍ಗಳು ಶರಣಾಗಬೇಕಾಯಿತು. ಯುದ್ಧದ ಮರುದಿನ ಟಿಪ್ಪುವಿನ ಸೇನೆಯ ವಿಜಯೋತ್ಸವ ನಡೆಯಿತು. ಎಲ್ಲಾ ನಾಯರ್ ಯುವಕರನ್ನೂ ನಿಲ್ಲಿಸಿ ಬಲವಂತವಾಗಿ ಮುಂಜಿ ಮಾಡಿಸಲಾಯಿತು. * ಹೆಣ್ಣುಗಂಡೆಂಬ ಭೇದವಿಲ್ಲದೆ ಎಲ್ಲರಿಗೂ ದನದ ಮಾಂಸ ತಿನ್ನಿಸಲಾಯಿತು. ತಮ್ಮ ಧರ್ಮಕ್ಕೆ ವಿರುದ್ಧವಾಗಿ ನಡೆಯುವುದು ಸಾವಿಗಿಂತ ದೊಡ್ಡ ದುರಂತ ಎಂದು ಭಾವಿಸಿದ್ದ ನಾಯರ್‍ಗಳಿಗೆ ಅಂದು ಆದ ಅವಮಾನ ಎಂದೆಂದೂ ಮಾಯದ ಗಾಯದಂತೆ ಉಳಿದುಕೊಂಡಿತು”. ಜನರನ್ನು ಮತಾಂತರ ಮಾಡಲು ಯಾವ ಮಾರ್ಗಗಳನ್ನೆಲ್ಲ ಬಳಸಿಕೊಳ್ಳಬಹುದೋ ಅವೆಲ್ಲವನ್ನೂ ಸಮರ್ಥವಾಗಿ ದುಡಿಸಿಕೊಳ್ಳುತ್ತಿದ್ದ ಟಿಪ್ಪು. ಮೈಸೂರಿನಲ್ಲಿ ಟಿಪ್ಪುವಿನ ಮಕ್ಕಳು ಬರೆದಿಟ್ಟ ಪತ್ರ, ಕಾಗದ, ಡೈರಿಗಳು – ಮುಂತಾದ ಲಿಖಿತ ದಾಖಲೆಗಳನ್ನು ಆಳವಾಗಿ ಅಭ್ಯಸಿಸಿ; ಕೀರ್ಮಾನಿಯಂಥ ಟಿಪ್ಪು ಆಸ್ಥಾನಪಂಡಿತರ ಮಾತುಗಳನ್ನು ಆಧರಿಸಿ ಎಮ್.ಎ. ಗೋಪಾಲ ರಾವ್ ಎಂಬವರು ಟಿಪ್ಪುವಿನ ಚರಿತ್ರೆಯನ್ನು ಬರೆದಿದ್ದಾರೆ. ಅದರಲ್ಲಿ ಈ ಮುಂದಿನ ಮಾತುಗಳನ್ನು ಅವರು ಬರೆದಿದ್ದಾರೆ: “ಟಿಪ್ಪುವಿನ ಮೂಲೋದ್ಧೇಶ ಮತಾಂತರವೇ ಆಗಿತ್ತು ಎನ್ನುವುದನ್ನು ಅವನ ಆಡಳಿತದ ನೀತಿ-ವಿಧಾನಗಳೇ ಸ್ಪಷ್ಟಪಡಿಸುತ್ತವೆ. ಟಿಪ್ಪುವಿನ ಆಡಳಿತದಲ್ಲಿ ಮುಸ್ಲಿಮರಿಗೆ ಮನೆ ತೆರಿಗೆ; ಕೊಳ್ಳುವ ವಸ್ತುಗಳ ಮೇಲೆ ಮಾರಾಟ ತೆರಿಗೆ ಮುಂತಾದವು ಇರಲಿಲ್ಲ. ಹಾಗೆಯೇ ಮುಸಲ್ಮಾನ ಮತಕ್ಕೆ ಮತಾಂತರಗೊಂಡವರಿಗೂ ಈ ಎಲ್ಲ ವಿನಾಯತಿಗಳನ್ನು ನೀಡಲಾಗುತ್ತಿತ್ತು. ಮತಾಂತರಗೊಂಡವರ ಮಕ್ಕಳನ್ನು ಉಚಿತವಾಗಿ ಓದಿಸುವುದಕ್ಕೂ ಟಿಪ್ಪು ವ್ಯವಸ್ಥೆ ಮಾಡಿದ್ದ. ಆದರೆ, ಅವನ ರಾಜ್ಯದ ಹಿಂದೂಗಳು ಮಾತ್ರ ಒಂದಕ್ಕೆರಡು ಪಟ್ಟು ತೆರಿಗೆ ಕಟ್ಟುತ್ತ ಹೈರಾಣಾಗಿದ್ದರು. ಸರಕಾರದ ಆಡಳಿತ ಮತ್ತು ಮಿಲಿಟರಿ ವ್ಯವಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಹಿಂದೂಗಳನ್ನು ಆರಿಸುವ ಪದ್ಧತಿ ಹೈದರಾಲಿಯ ಕಾಲದಲ್ಲಿತ್ತು. ಅದನ್ನು ಟಿಪ್ಪು ಸಂಪೂರ್ಣವಾಗಿ ನಿಲ್ಲಿಸಿದ. ಅವನ ಹದಿನಾರು ವರ್ಷಗಳ ಆಡಳಿತದಲ್ಲಿ ಸರಕಾರದಲ್ಲಿ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ ಏಕೈಕ ಹಿಂದೂ ಎಂದರೆ ದಿವಾನನ ಹುದ್ದೆಯಲ್ಲಿದ್ದ ಪೂರ್ಣಯ್ಯ ಮಾತ್ರ. 1797ರ ಹೊತ್ತಿಗೆ ಸರಕಾರದ ಒಟ್ಟು 65 ಉನ್ನತ ಹುದ್ದೆಗಳಲ್ಲಿ ಒಂದೇ ಒಂದರಲ್ಲೂ ಮುಸ್ಲಿಮರನ್ನು ಬಿಟ್ಟರೆ ಬೇರೆ ಜಾತಿ-ಮತ-ಧರ್ಮದವರು ಇರಲಿಲ್ಲ. 1792ರಲ್ಲಿ ಬ್ರಿಟಿಷರು ಹಿಡಿದು ಹಾಕಿದ್ದ ಒಟ್ಟು 26 ಅಧಿಕಾರಿಗಳಲ್ಲಿ ಕೇವಲ ಆರು ಜನ ಮಾತ್ರ ಬೇರೆ ಮತದವರಾಗಿದ್ದರು. 1789ರಲ್ಲಿ ಹೈದರಾಬಾದಿನ ನಿಜಾಮ, ಸರಕಾರದ ನೌಕರಶಾಹಿಯಲ್ಲಿ ಮುಸ್ಲಿಮರನ್ನು ಬಿಟ್ಟರೆ ಬೇರಾವ ಮತ-ಧರ್ಮಗಳವರೂ ಇರಬಾರದು ಎಂಬ ಕಾನೂನು ತಂದಿದ್ದ. ಅದನ್ನು ಕೆಲವೇ ವರ್ಷಗಳಲ್ಲಿ ಟಿಪ್ಪು ಅಳವಡಿಸಿಕೊಂಡ. ನೌಕರಿ ಎಂಬುದು ಅರ್ಹತೆಗಿಂತ ಜಾತಿಯಾಧಾರಿತವಾದ ಮೇಲೆ, ಅನಕ್ಷರಸ್ಥರು, ಅನನುಭವಿಗಳು, ಸರಿಯಾದ ಕೌಶಲ ಇಲ್ಲದವರೆಲ್ಲ ವಿವಿಧ ಹುದ್ದೆಗಳನ್ನು ಅಲಂಕರಿಸತೊಡಗಿದರು. ಮೇಲ್‍ಸ್ತರದಲ್ಲಿ ಕೆಲಸ ಮಾಡುವವರೆಲ್ಲ ಮುಸ್ಲಿಮರೇ ಆದ್ದರಿಂದ ಕನ್ನಡ ಮತ್ತು ಮರಾಠಿಯ ಬದಲು ಪರ್ಶಿಯನ್ ಭಾಷೆಯನ್ನೇ ಬರಹದಲ್ಲಿ ಉಪಯೋಗಿಸತೊಡಗಿದರು. ಬರಬರುತ್ತ ಆಡಳಿತವೆನ್ನುವುದು ಭ್ರಷ್ಟಾಚಾರದ ಕೂಪವಾಗಿ ಪತಿವರ್ತನೆಯಾಯಿತು. ಆಲಸಿಗಳು, ಅದಕ್ಷರು ಎಲ್ಲೆಲ್ಲೂ ತುಂಬಿಕೊಂಡರು. ಇಂಥವರ ಬಗ್ಗೆ ಸಾರ್ವಜನಿಕರು ಎಷ್ಟೇ ದೂರು ಒಯ್ದರೂ ಟಿಪ್ಪು, ಅವುಗಳ ಮೇಲೆ ವಿಚಾರಣೆ ಕರೆಯಲಿಕ್ಕೂ ಮನಸ್ಸು ಮಾಡಲಿಲ್ಲ”. – ಇಲ್ಲಿ ಮುಖ್ಯವಾಗಿ, ಟಿಪ್ಪುವಿನ ಮತಾಂಧತೆ ಹೇಗೆ ಕೊನೆಗೆ ಇಡೀ ರಾಜ್ಯಾಡಳಿತವನ್ನೇ ಹಳ್ಳಹಿಡಿಸಿತು ಎನ್ನುವುದನ್ನು ಗೋಪಾಲ ರಾಯರು ವಿವರಿಸಿದ್ದಾರೆ. ಅಲ್ಲದೆ, ಅದರಿಂದ ಕನ್ನಡಭಾಷೆಯೂ ಬಹುದೊಡ್ಡ ಹೊಡೆತ ತಿನ್ನಬೇಕಾಯಿತು. ಟಿಪ್ಪು ತನ್ನ ಮತದ ಬಗ್ಗೆ ಅದೆಷ್ಟು ಅಂಧಾಭಿಮಾನ ಇಟ್ಟುಕೊಂಡಿದ್ದನೆಂದರೆ, ಪರ್ಶಿಯನ್‍ಅನ್ನು ರಾಜ್ಯಭಾಷೆಯಾಗಿ ತರುವ ಬಗ್ಗೆಯೂ ಯೋಚನೆ ಮಾಡಿದ್ದ. ಕೊನೆಗೆ, ತನ್ನ ಭಾಷೆಯನ್ನು ಇಡೀ ರಾಜ್ಯದ ಜನತೆಯ ಮೇಲೆ ಹೇರಿದರೆ ದೊಡ್ಡಮಟ್ಟದ ವಿರೋಧ ಎದುರಿಸಬೇಕಾದೀತೆಂಬ ಭಯದಿಂದ ಆ ಕೆಲಸಕ್ಕೆ ಕೈಹಾಕಲಿಲ್ಲ ಅಷ್ಟೆ. ಆಡಳಿತದಲ್ಲಿ ಮಾತ್ರ ಬಹುತೇಕ ಎಲ್ಲ ವಿಭಾಗಗಳಲ್ಲೂ ಪರ್ಶಿಯನ್ ಪದಗಳು ನಿಂತುಹೋಗಿವೆ. ಜೆಹಾದ್ ಉಗ್ರ ಟಿಪ್ಪು ಮೂಲತಃ ಒಬ್ಬ ಮತಾಂಧ ಅರಸನಾಗಿದ್ದ ಎನ್ನುವುದಕ್ಕೆ ಅವನೇ ಬರೆದ ಹಲವು ಪತ್ರಗಳು ಸಾಕ್ಷಿ ಹೇಳುತ್ತವೆ. ಅಬ್ದುಲ್ ಖಾದಿರ್‍ನಿಗೆ 1788ರ ಮಾರ್ಚ್ 22ರಂದು ಬರೆಯುವ ಪತ್ರದಲ್ಲಿ “ಒಟ್ಟು 12,000 ಜನ ಹಿಂದೂಗಳನ್ನು ಇಸ್ಲಾಮ್ ಧರ್ಮಕ್ಕೆ ಮತಾಂತರಿಸಲಾಯಿತು. ಅವರಲ್ಲಿ ಹೆಚ್ಚಿನವರು ನಂಬೂದಿರಿ ಬ್ರಾಹ್ಮಣರು. ಈ ಮತಾಂತರ ಕಾರ್ಯವನ್ನು ದೊಡ್ಡಮಟ್ಟದಲ್ಲಿ ಪ್ರಚಾರಗೊಳಿಸಬೇಕು. ಸ್ಥಳೀಯ ಊರುಗಳ ಎಲ್ಲಾ ಹಿಂದೂ ಧರ್ಮೀಯರನ್ನೂ ನಿನ್ನೆದುರು ನಿಲ್ಲಿಸಿ ಇಸ್ಲಾಂಗೆ ಮತಾಂತರಿಸುವ ಕೆಲಸ ನಡೆಯಲಿ. ನೆನಪಿಡು – ಒಬ್ಬನೇ ಒಬ್ಬ ಬ್ರಾಹ್ಮಣನೂ ತಪ್ಪಿಸಿಕೊಳ್ಳಬಾರದು” ಎಂದು ಬರೆಯುತ್ತಾನೆ ಟಿಪ್ಪು. 1790ರ ಜನವರಿ 18ರಂದು ಸಯ್ಯದ್ ಅಬ್ದುಲ್ ದುಲಾಯಿಗೆ ಪತ್ರ ಬರೆದು “ಪ್ರವಾದಿ ಮುಹಮ್ಮದ ಮತ್ತು ಅಲ್ಲಾಹನ ದಯೆಯಿಂದ, ಕಲ್ಲಿಕೋಟೆಯ ಎಲ್ಲಾ ಹಿಂದೂಗಳೂ ಇಸ್ಲಾಂ ಮತೀಯರಾದರು. ಕೊಚ್ಚಿ ರಾಜ್ಯದ ಗಡಿಭಾಗದಲ್ಲಿರುವ ಕೆಲವರು ಮಾತ್ರ ಇನ್ನೂ ಮತ ಬದಲಾಯಿಸದೆ ಉಳಿದುಕೊಂಡಿದ್ದಾರೆ. ಅವರನ್ನೂ ಬಿಡದೆ ಮತಾಂತರ ಮಾಡುವ ಕೆಲಸವನ್ನು ಶೀಘ್ರದಲ್ಲೇ ಕೈಗೆತ್ತಿಕೊಂಡು ಮುಗಿಸುತ್ತೇನೆ. ಇದನ್ನು ನಾನು ಜೆಹಾದ್ ಎಂದೇ ಪರಿಗಣಿಸಿದ್ದೇನೆ” ಎಂದಿದ್ದಾನೆ. ಅದರ ಮರುದಿನ ಬುದ್ರುಜ್ ಜುಮನ್ ಖಾನ್‍ಗೆ ಬರೆಯುವ ಪತ್ರದಲ್ಲಿ “ನಾನು ಇತ್ತೀಚೆಗೆ ಮಲಬಾರ್ ಪ್ರಾಂತ್ಯದಲ್ಲಿ ನಾಲ್ಕು ಲಕ್ಷ ಜನರನ್ನು ಇಸ್ಲಾಂಗೆ ಮತಾಂತರಿಸಿದ್ದು ನಿನಗೆ ಗೊತ್ತಿದೆಯೆ? ಅಂಥ ಸಾಧನೆ ಮಾಡಿದ ಮೇಲೆ ಅದೆಷ್ಟು ಉತ್ಸಾಹ ಬಂದಿದೆಯೆಂದರೆ ರಾಮನ್ ನಾಯರ್‍ನ (ತಿರುವಾಂಕೂರಿನ ರಾಜ ರಾಮ ವರ್ಮ) ರಾಜ್ಯದ ಮೇಲೆ ದಂಡೆತ್ತಿಹೋಗುವುದಕ್ಕೆ ಕಾತರದಿಂದ ಕಾಯುತ್ತಿದ್ದೇನೆ. ಆತನನ್ನೂ ಆತನ ಜನರನ್ನೂ ಇಸ್ಲಾಂಗೆ ಮತಾಂತರಿಸುವ ಯೋಚನೆಯೇ ಚೇತೋಹಾರಿಯಾಗಿದೆ. ಶ್ರೀರಂಗಪಟ್ಟಣಕ್ಕೆ ವಾಪಸು ಹೋಗುವುದನ್ನು ಕೂಡ ನಾನು ಮರೆತಂತಿದೆ” ಎಂದು ಬರೆಯುತ್ತಾನೆ. ಲಾಹೋರಿನ ಪಾಕಿಸ್ತಾನ್ ಅಡ್ಮಿನಿಸ್ಟ್ರೇಟಿವ್ ಸ್ಟಾಫ್ ಕಾಲೇಜು 1964ರಲ್ಲಿ ಪ್ರಕಟಿಸಿದ “ಲೈಫ್ ಆಫ್ ಟಿಪ್ಪು ಸುಲ್ತಾನ್” ಎಂಬ ಕೃತಿಯಲ್ಲಿ ಈ ಸಾಲುಗಳನ್ನು ಬರೆಯಲಾಗಿದೆ: ಟಿಪ್ಪು ಮಲಬಾರ್ ಪ್ರಾಂತ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಹಿಂದೂಗಳನ್ನೂ 70,000 ಕ್ರಿಶ್ಚಿಯನ್ನರನ್ನೂ ಬಲಾತ್ಕಾರವಾಗಿ ಮತಾಂತರ ಮಾಡಿದ. ಅವರಿಗೆ ಮುಂಜಿ ಮಾಡಿ ದನದ ಮಾಂಸ ತಿನ್ನಿಸಿ ಧರ್ಮಭ್ರಷ್ಟಗೊಳಿಸಲಾಯಿತು. ಈ ಎಲ್ಲ ಕೆಲಸಗಳು ಅತ್ಯಂತ ಹೀನಾಯ ಮತ್ತು ಅನೈತಿಕವಾಗಿದ್ದರೂ ಅವು ಟಿಪ್ಪುವಿನ ಉದ್ಧೇಶ ನೆರವೇರಿಸಿದವು ಎಂದು ಹೇಳಬಹುದು. ತಮ್ಮ ಧರ್ಮದಿಂದ ಭ್ರಷ್ಟಗೊಂಡ ಮೇಲೆ ಆ ಜನರಿಗೆ ತಮ್ಮ ವೈರಿಯ ಮತವನ್ನು ಒಪ್ಪಿಕೊಂಡು ಜೀವ ಉಳಿಸಿಕೊಳ್ಳುವುದಕ್ಕಿಂತ ಬೇರೆ ಆಯ್ಕೆಗಳೇ ಇರಲಿಲ್ಲ. ಹೀಗೆ ಮತಾಂತರಗೊಂಡವರ ಮಕ್ಕಳು ಮುಸ್ಲಿಮರೇ ಆದರು. ಮತಾಂತರಗೊಂಡವರಿಗೆ ತೆರಿಗೆ ವಿನಾಯಿತಿ, ಸೇನೆಯಲ್ಲಿ ಕೆಲಸ ಇತ್ಯಾದಿ ಸೌಲಭ್ಯ ದೊರೆತದ್ದರಿಂದ, ಅವರು ತಮ್ಮ ಇಚ್ಛೆಗೆ ವಿರುದ್ಧವಾಗಿದ್ದರೂ ಇಸ್ಲಾಂ ಮತದಲ್ಲಿ ಉಳಿದುಕೊಳ್ಳುವಂತಾಯಿತು. ಟಿಪ್ಪುವಿನ ಮತಾಂತರ ಕಾರ್ಯ ಕೇವಲ ಮಲಬಾರ್ ಪ್ರಾಂತ್ಯಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಅದು ಪೂರ್ವದಲ್ಲಿ ಕೊಯಮತ್ತೂರಿನವರೆಗೂ ಹರಡಿತ್ತು”. ದೇಗುಲಭಂಜಕ ಕೇರಳದ ಮಲಬಾರ್ ಪ್ರಾಂತ್ಯದಲ್ಲಿದ್ದ ಕ್ರಿಶ್ಚಿಯನ್ನರು ಮತ್ತು ಹಿಂದೂಗಳನ್ನು ಬಲಾತ್ಕಾರವಾಗಿ ಮತಾಂತರ ಮಾಡಿಸಬೇಕು ಎನ್ನುವುದು ಟಿಪ್ಪುವಿನ ಉದ್ಧೇಶವಾಗಿತ್ತು. ಲೆವಿಸ್ ಬಿ. ಬೌರಿ ಎಂಬ ಬ್ರಿಟಿಷ್ ಇತಿಹಾಸಜ್ಞನ ಪ್ರಕಾರ, ಟಿಪ್ಪು ಮಲಬಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡಿದ ಅತ್ಯಾಚಾರ, ದೌರ್ಜನ್ಯಗಳನ್ನು ಭಾರತದ ಮೇಲೆ ದಾಳಿ ಮಾಡಿದ ಮುಹಮ್ಮದ್ ಘಜನಿ, ಅಲ್ಲಾದೀನ್ ಖಿಲ್ಜಿ, ನಾದಿರ್ ಷಾ ಮುಂತಾದವರಿಗೂ ಸರಿಗಟ್ಟುವುದು ಸಾಧ್ಯವಿಲ್ಲ. ವಿಲಿಯಂ ಲೋಗನ್ ತನ್ನ “ಮಲಬಾರ್ ಮ್ಯಾನುಯೆಲ್” ಹೊತ್ತಗೆಯಲ್ಲಿ, ಟಿಪ್ಪು ನಾಶಗೊಳಿಸಿದ ಹಿಂದೂ ದೇವಾಲಯಗಳ ಪಟ್ಟಿ ಮಾಡುತ್ತಾನೆ. ಚಿರಕ್ಕಲ್ ತಾಲೂಕಿನ ತ್ರಿಚಂಬರಂ ಮತ್ತು ತಲಿಪ್ಪರಂಪು ದೇವಸ್ಥಾನಗಳು, ತೆಲಿಶ್ಶೇರಿಯ ತಿರುವೆಂಕಟ ದೇವಸ್ಥಾನ, ಬಡಕ್ಕರ ಸಮೀಪದ ಪೊನ್ಮೆರಿ ದೇವಸ್ಥಾನ – ಇವೆಲ್ಲ ಟಿಪ್ಪು ದಾಳಿಗೆ ಒಳಗಾದ ಹಿಂದೂ ಶ್ರದ್ಧಾಕೇಂದ್ರಗಳು. ಕೇರಳದ ಮಣಿಯೂರು ಮಸೀದಿ ಒಂದು ಕಾಲದಲ್ಲಿ ದೇವಸ್ಥಾನವಾಗಿತ್ತು ಎಂಬ ಅಂಶವನ್ನೂ ವಿಲಿಯಂ ಮುಂದಿಡುತ್ತಾರೆ. ಟಿಪ್ಪು ಮೈಸೂರು, ಕೊಡಗು, ಮಂಗಳೂರು ಮತ್ತು ಕೇರಳಗಳಲ್ಲಿ ಹಿಂದೂ ದೇವಸ್ಥಾನಗಳಲ್ಲಿ ತೋರಿಸಿದ ಕ್ರೌರ್ಯಕ್ಕೆ ಸಮಾನವಾದ ಬೇರಾವ ಉದಾಹರಣೆಗಳೂ ನಮಗೆ ಸಿಗುವುದಿಲ್ಲ. ಬೆಂಕಿ ಹಚ್ಚಿ ನೂರಾರು ದೇವಾಲಯಗಳನ್ನು ಬೂದಿ ಮಾಡಲಾಯಿತು. ಕಲ್ಲಿನ ಕೆತ್ತನೆಗಳನ್ನು ವಿರೂಪಗೊಳಿಸಲಾಯಿತು. ತಾಳಿಪ್ಪರಂಪು, ತ್ರಿಶಂಬರಂ ಮುಂತಾದ ಅತಿಪ್ರಮುಖ ದೇವಸ್ಥಾನಗಳಲ್ಲಿ ಟಿಪ್ಪು ಮತ್ತವನ ಸೈನಿಕರು ಮಾಡಿದ ಅನಾಚಾರಗಳನ್ನು ಎಂದಿಗೂ ಕ್ಷಮಿಸುವುದು ಸಾಧ್ಯವಿಲ್ಲ ಎಂದು ವಟಕ್ಕಂಕೂರು ರಾಜರಾಜ ವರ್ಮ ತನ್ನ “ಕೇರಳದ ಸಂಸ್ಕøತ ಸಾಹಿತ್ಯದ ಚರಿತ್ರೆ” ಎಂಬ ಪ್ರಸಿದ್ಧ ಕೃತಿಯಲ್ಲಿ ದಾಖಲಿಸಿದ್ದಾರೆ. ಟಿಪ್ಪುವಿನ ಕೈಯಿಂದ ದಕ್ಷಿಣ ಭಾರತದಲ್ಲಿ ನಾಶಗೊಂಡ ಒಟ್ಟು ದೇವಾಲಯಗಳ ಸಂಖ್ಯೆ 8000ಕ್ಕೂ ಹೆಚ್ಚು ಎನ್ನುವ ಮಾತನ್ನು ಮೈಸೂರು ಗಝೆಟಿಯರ್ ದಾಖಲಿಸಿದೆ. ತಳಿ, ತಿರುವಣ್ಣೂರು, ವಾರಕ್ಕಲ್, ಪುತ್ತೂರು, ಗೋವಿಂದಪುರ ಮುಂತಾದ ಸ್ಥಳಗಳಲ್ಲಿದ್ದ ನೂರಾರು ದೇವಸ್ಥಾನಗಳು ಟಿಪ್ಪು ದಾಳಿಗೊಳದಾವು ಎನ್ನುವುದನ್ನು ಮಲಬಾರ್ ಗಝೆಟಿಯರ್ ಹೇಳುತ್ತದೆ. ಮಧೂರಿನ ಖ್ಯಾತ ಅನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಟಿಪ್ಪು ಮಾಡಿದ ಕತ್ತಿಯ ಗುರುತು ಇಂದಿಗೂ ಉಳಿದುಕೊಂಡಿದೆ. ಬ್ರಿಟಿಷ್ ಇತಿಹಾಸಕಾರ ಲೆವಿಸ್ ರೈಸ್ ತನ್ನ “ಹಿಸ್ಟರಿ ಆಫ್ ಮೈಸೂರ್ ಆಂಡ್ ಕೂರ್ಗ್” ಕೃತಿಯಲ್ಲಿ “ಟಿಪ್ಪು ಸುಲ್ತಾನ ಸಾಯುವ ಕಾಲಕ್ಕೆ ಆತನ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲಿ ದಿನವೂ ಪೂಜೆ ನಡೆಯುತ್ತಿದ್ದ ದೇಗುಲಗಳು ಎರಡೇ. ಜಾತಕ, ಜ್ಯೋತಿಷ್ಯ ಮುಂತಾದವುಗಳಲ್ಲಿ ನಂಬಿಕೆ ಇಟ್ಟಿದ್ದ ಟಿಪ್ಪು, ಶ್ರೀರಂಗಪಟ್ಟಣದ ಕೆಲವು ಬ್ರಾಹ್ಮಣರಲ್ಲಿ ತನ್ನ ಭವಿಷ್ಯ ಕೇಳಲು ಹೋಗುತ್ತಿದ್ದ. ಕೆಲವೊಂದು ದೇವಸ್ಥಾನಗಳಲ್ಲಿ ಶಾಂತಿಹೋಮಗಳನ್ನು ನಡೆಸಿದರೆ ಎಲ್ಲ ವಿಘ್ನಗಳೂ ನಿವಾರಣೆಯಾಗುತ್ತವೆ ಎಂದು ಆ ಬ್ರಾಹ್ಮಣರು ಹೇಳಿದ್ದರಿಂದ, ಚಕ್ರವರ್ತಿಯಾಗುವ ಕನಸು ಕಾಣುತ್ತಿದ್ದ ಟಿಪ್ಪು, ಒಂದೆರಡು ದೇವಸ್ಥಾನಗಳಲ್ಲಿ ಪೂಜೆ ನಡೆಸುವುದಕ್ಕೆ ಏರ್ಪಾಡು ಮಾಡಿದ. ಉಳಿದೆಲ್ಲಾ ದೇವಾಲಯಗಳ ಸಂಪತ್ತನ್ನೂ 1790ಕ್ಕಿಂತ ಮೊದಲೇ ಆತ ಮುಟ್ಟುಗೋಲು ಹಾಕಿಕೊಂಡಾಗಿತ್ತು. ತನ್ನ ರಾಜ್ಯದ ಆರ್ಥಿಕ ನಷ್ಟವನ್ನು ಸರಿದೂಗಿಸಲು ಟಿಪ್ಪು ಮುಖ್ಯವಾಗಿ ದೇವಸ್ಥಾನಗಳ ಸಂಪತ್ತನ್ನೇ ಅವಲಂಭಿಸಿದ್ದ” ಎಂದು ದಾಖಲಿಸಿದ್ದಾನೆ. ಕ್ರೈಸ್ತರ ವೈರಿ ಟಿಪ್ಪುವಿನ ತಂದೆ ಹೈದರಾಲಿಯ ಕಾಲದಲ್ಲಿ ಬಿದನೂರು ಪ್ರಮುಖ ನಗರವಾಗಿತ್ತು. ಆಗ ಅದಕ್ಕೆ ಹೈದರ್‍ನಗರ ಎಂದೇ ಹೆಸರು. ಚಿರಕ್ಕಲ್ ರಾಜ್ಯದ ಕಮ್ಮಾರನ್ ನಂಬಿಯಾರ್ ಎಂಬಾತನನ್ನು ಇಸ್ಲಾಂಗೆ ಮತಾಂತರಿಸಿ ಅಯಾಜ್ ಖಾನ್ ಎಂದು ನಾಮಕರಣ ಮಾಡಿ, ಆತನ ಧೈರ್ಯ-ಸಾಹಸಗಳನ್ನು ಮೆಚ್ಚಿ ಹೈದರಾಲಿ ಅವನನ್ನು ಬಿದನೂರಿನ ಮಾಂಡಲಿಕನಾಕನಾಗಿ ನೇಮಿಸಿದ್ದ. ಆದರೆ, ಟಿಪ್ಪುವಿಗೂ ಅಯಾಜ್ ಖಾನನಿಗೂ ಸಂಬಂಧ ಚೆನ್ನಾಗಿರಲಿಲ್ಲ. ಕೊನೆಗೊಮ್ಮೆ ಟಿಪ್ಪು ತನ್ನನ್ನು ಮುಗಿಸಿಹಾಕಲು ಯೋಜನೆ ರೂಪಿಸಿದ್ದಾನೆ ಎಂಬುದನ್ನು ತಿಳಿದು ಅಯಾಜ್ ಖಾನ್ ತನ್ನಲ್ಲಿದ್ದ ಚಿನ್ನ ದುಡ್ಡು ತೆಗೆದುಕೊಂಡು ಬಾಂಬೆ ರಾಜ್ಯಕ್ಕೆ ಓಡಿಹೋದ. ಬಿದನೂರಿಗೆ ದಾಳಿ ಮಾಡಿದ ಟಿಪ್ಪು ಅಲ್ಲಿದ್ದ ಎಲ್ಲಾ ಹಿಂದೂಗಳನ್ನು, ಒಬ್ಬರನ್ನೂ ಬಿಡದೆ, ಇಸ್ಲಾಂಗೆ ಮತಾಂತರಿಸಿದ. ತಪ್ಪಿಸಿಕೊಂಡು ಓಡಲು ಪ್ರಯತ್ನಿಸಿದವರನ್ನು ಒಂದೋ ಕೊಲ್ಲಲಾಯಿತು, ಇಲ್ಲವೇ ಜೈಲುಗಳಲ್ಲಿ ಜೀವಮಾನಪೂರ್ತಿ ಕಳೆಯುವಂತೆ ಕೂಡಿಹಾಕಲಾಯಿತು. ಬಿದನೂರಲ್ಲಿ ಆತ ನಡೆಸಿದ ಹಿಂಸಾವಿನೋದಗಳ ಸಾಕ್ಷಿಗಳು ಈಗಲೂ ದೊರೆಯುತ್ತವೆ. ಜನರನ್ನು ಇಸ್ಲಾಂಗೆ ಮತಾಂತರಿಸುವುದೇ ತನ್ನ ಜೀವನದ ಪರಮೋದ್ದೇಶವೆಂದು ಭಾವಿಸಿದ್ದ ಟಿಪ್ಪು ಮಂಗಳೂರಲ್ಲಿ ಅತ್ಯಂತ ಕ್ರೂರವಾಗಿ ಕ್ರಿಶ್ಚಿಯನ್ನರನ್ನು ನಡೆಸಿಕೊಂಡ. ಹಲವು ಬಗೆಯ ಶಿಕ್ಷೆ, ಬೆದರಿಕೆಗಳ ಮೂಲಕ ಅವರನ್ನು ಮುಸ್ಲಿಮರಾಗಿಸಲಾಯಿತು. ಪೋರ್ತುಗೀಸರು ಅಲ್ಲಿ ಕ್ರಿಶ್ಚಿಯನ್ ಮತಾಂತರ ಕೆಲಸ ಮಾಡಿದ್ದಾರೆ. ಹಾಗಾಗಿ ತಾನು ಮಾಡುತ್ತಿರುವ ಕೆಲಸಕ್ಕೆ ಯಾವ ಪಾಪಲೇಪವೂ ಇಲ್ಲ ಎಂದು ಟಿಪ್ಪು ಹೇಳಿಕೊಳ್ಳುತ್ತಿದ್ದ. ಮಂಗಳೂರಲ್ಲಿ ಆತ ನಡೆಸಿದ ಅತ್ಯಾಚಾರಕ್ಕೆ ವಿಟ್ಲದ ಬಳಿಯ ನೆತ್ತರಕೆರೆ ಈಗಲೂ ಸಾಕ್ಷಿಯಾಗಿ ನಿಂತಿದೆ. ಮಂಗಳೂರಲ್ಲಿ ಹಿಡಿದುಹಾಕಿದ ಕ್ರಿಶ್ಚಿಯನ್ನರ ಕೈಕಾಲುಗಳಿಗೆ ಕೋಳ ತೊಡಿಸಿ ಶ್ರೀರಂಗಪಟ್ಟಣದವರೆಗೆ ನಡೆಸಲಾಯಿತು. ದಾರಿಯಲ್ಲಿ ಸುಮಾರು ನಾಲ್ಕುಸಾವಿರ ಜನ ಅಸುನೀಗಿದರು. ಉಳಿದವರನ್ನು ಶ್ರೀರಂಗಪಟ್ಟಣದಲ್ಲಿ ಸಾಮೂಹಿಕವಾಗಿ ಮುಂಜಿ ಮಾಡಿಸಿ, ಜೈಲಿಗೆ ತಳ್ಳಲಾಯಿತು. ಬ್ರಿಟಿಷರ ಗೂಢಚಾರರು ಎಂಬ ಸಂಶಯದಿಂದ ಟಿಪ್ಪು ಸುಮಾರು 60,000 ಮಂಗಳೂರಿನ ಕ್ರಿಶ್ಚಿಯನ್ನರನ್ನು ಸೆರೆಗೆ ಹಾಕಿದ! ಅಲ್ಲದೆ, ಅಲ್ಲಿದ್ದ ಹಲವು ಚರ್ಚುಗಳನ್ನು ನೆಲಸಮ ಮಾಡಿಹಾಕಿದ. 1680ರಲ್ಲಿ ಕಟ್ಟಲ್ಪಟ್ಟಿದ್ದ ಮಿಲಾಗ್ರಿಸ್ ಚರ್ಚು 1784ರಲ್ಲಿ ಟಿಪ್ಪುವಿನ ಕೈಯಲ್ಲಿ ನಾಮಾವಶೇಷವಾಯಿತು.ಔತಣಕೂಟದಲ್ಲಿ ನೆತ್ತರೋಕುಳಿ ಟಿಪ್ಪುವಿನ ಪಾತಕಗಳಿಗೆ ಪ್ರಬಲ ಪ್ರತಿರೋಧ ಒಡ್ಡುತ್ತಿದ್ದವರೆಂದರೆ ಕೊಡವರು. ಫ್ರೆಂಚ್ ಸೇನೆಯ ನೆರವು ಪಡೆದರೂ ಕೊಡವ ಸೇನೆಯನ್ನು ಬಗ್ಗುಬಡಿಯಲು ಸಾಧ್ಯವಾಗದ ಮೇಲೆ ಟಿಪ್ಪು ಅವರನ್ನು ಉಪಾಯದಿಂದ ಸೋಲಿಸುವ ಕುತಂತ್ರ ಹೆಣೆದ. ವಿವಾದಾತ್ಮಕ ಹೇಳಿಕೆಗಳು ಕರ್ನಾಟಕದ ಸಚಿವ ಡಿ.ಎಚ್.ಶಂಕರಮೂರ್ತಿ ಅವರು ನೀಡಿದ 'ಟೀಪ್ಪು ಕನ್ನಡ ವಿರೋಧಿ' ಎಂಬ ಹೇಳಿಕೆ ಟೀಪ್ಪು ಕುರಿತ ವಿವಾದಗಳನ್ನು ಕೆಣಕಿತು. ಗಿರೀಶ್ ಕಾರ್ನಾಡ್ ಅವರು ಟಿಪ್ಪು ದಿನಾಚರಣೆ ಸಂದರ್ಭದಲ್ಲಿ ಮಾತನಾಡುತ್ತಾ "ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬಹುದಿತ್ತು" ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಯಿತು. ಬಡತನ, ನಿರುದ್ಯೋಗ, ಅನಕ್ಷರತೆ ಮುಂತಾದ ಸಕಲೆಂಟು ಸಾಮಾಜಿಕ, ಆರ್ಥಿಕ ಸಮಸ್ಯೆಗಳ ಜೊತೆಗೆ ಅಭದ್ರತೆ, ತಳಮಳ ಎದುರಿಸುತ್ತಿರುವ ಮುಸ್ಲಿಂ ಸಮುದಾಯಕ್ಕೆ ಸರ್ಕಾರ ಮಾಡಬೇಕಾದ್ದು ಬೇಕಾದಷ್ಟಿತ್ತು. ಮುಸ್ಲಿಂ ಸಮುದಾಯದ ಸಮಗ್ರ ಅಧ್ಯಯನ ನಡೆಸಿ ಸಾಚಾರ್ ಸಮಿತಿ ನೀಡಿದ ವರದಿಯನ್ನು ದಕ್ಷವಾಗಿ ಅನುಷ್ಠಾನಗೊಳಿಸಿದ್ದರೂ ಆ ಸಮುದಾಯದ ಸ್ಥಿತಿ ಉತ್ತಮಗೊಳ್ಳಬಹುದಿತ್ತು. ಆದರೆ ಜಾತಿಗೊಂದು ಜಯಂತಿ ನಿಗದಿಪಡಿಸಿ ಆ ಸಮುದಾಯವನ್ನೇ ಉದ್ಧಾರ ಮಾಡಿದೆವೆಂದು ಬೀಗುವ ಆಳುವವರಿಂದ ಇದಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸುವಂತಿರಲಿಲ್ಲ. ಇದುವರೆಗೆ ಕೆಲ ಸಂಘಸಂಸ್ಥೆಗಳು ಆಚರಿಸಿಕೊಂಡು ಬರುತ್ತಿದ್ದ ಟಿಪ್ಪು ಜಯಂತಿಯನ್ನು ಈ ಸಲದಿಂದ ಸರ್ಕಾರವೇ ಆಚರಿಸಲು ತೀರ್ಮಾನಿಸಿತು. ಮತ್ತಿನ್ನಾವ ಜಯಂತಿ, ಪುಣ್ಯತಿಥಿಗಳಲ್ಲೂ ಹೀಗಾಗಿರಲಿಲ್ಲ. ಇವನ್ನೂ ಓದಿ ಹೈದರ್ ಆಲಿ ಟಿಪ್ಪು ಸುಲ್ತಾನ್ ಟಿಪ್ಪು ಮನೆತನದವರು: ಹೊರಗಿನ ಸಂಪರ್ಕಗಳು ಟೀಪು ಬಗ್ಗೆ ಗ್ಯಾಲರಿ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಶ್ವಕೋಶದಲ್ಲಿನ ಮಾಹಿತಿಪುಟ ಉಲ್ಲೇಖ ಭಾರತೀಯ ಇತಿಹಾಸದ ಪ್ರಮುಖರು ಭಾರತದ ಇತಿಹಾಸ ಕರ್ನಾಟಕದ ಇತಿಹಾಸ .
936
https://kn.wikipedia.org/wiki/%E0%B2%B9%E0%B2%82%E0%B2%AA%E0%B3%86
ಹಂಪೆ
ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (1336-1565) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು. ಅಂದರೆ ತುಂಗಭದ್ರ ನದಿ ಎಂದರ್ಥ. ವರ್ಷಗಳು ಕಳೆದಂತೆ ಇದು 'ವಿಜಯನಗರ' ಮತ್ತು 'ವಿರುಪಾಕ್ಷಪುರ' ಎಂದು ಕರೆಯಲ್ಪಟ್ಟಿತು. ಹಂಪೆಯನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣ ಎಂದು ಘೋಷಿಸಿದೆ. ವಿಜಯನಗರ ಸಾಮ್ರಾಜ್ಯದ ಒಡೆಯನಾದ ಕೃಷ್ಣದೇವರಾಯನ ಕಾಲದಲ್ಲಿ ಹಂಪಿ ಬಜಾರ್ ಎಂದೆನ್ನಿಸಿ ಕೊಂಡ ಬೀದಿಯಲ್ಲಿ ವಜ್ರಾಭರಣಗಳನ್ನು ತೂಕದ ಮಾದರಿಯಲ್ಲಿ ಮಾರಲ್ಪಡುತ್ತಿದ್ದರಂತೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದುಕೊಳ್ಳುತ್ತಾ ಬಂತು. ಕೊನೆಗೆ ತಾಳಿಕೋಟೆಯ ಯುದ್ಧದಲ್ಲಿ ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪಿಯಲ್ಲಿದ್ದ ಅನೇಕ ಸ್ಮಾರಕಗಳನ್ನು ಸುಮಾರು ಆರು ತಿಂಗಳುಗಳ ಕಾಲ ಸೈನಿಕರು ನಾಶ ಮಾಡಿದರು ಎನ್ನುತ್ತದೆ ಇತಿಹಾಸ. ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಬಗಳು, ವಿಶ್ವವಿಖ್ಯಾತ ಕಲ್ಲಿನ ರಥ, ಮಹಾನವಮಿ ದಿಬ್ಬ, ಸಾಸಿವೆಕಾಳು ಗಣಪತಿ, ಉಗ್ರನರಸಿಂಹ, ಕಮಲ ಮಹಲ್, ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ. ಭೂವಿವರಣೆ ಹಂಪಿಯು ತುಂಗಭದ್ರಾ ನದಿಯ ತೀರದಲ್ಲಿದೆ. ಇದು ಬೆಂಗಳೂರಿನಿಂದ ೩೪೩ ಕಿ.ಮೀ., ಬಿಜಾಪುರದಿಂದ ೨೫೪ ಕಿ.ಮೀ., ಮತ್ತು ಬಳ್ಳಾರಿಯಿಂದ ೭೪ ಕಿ.ಮೀ ದೂರದಲ್ಲಿದೆ. ೧೩ ಕಿ.ಮೀ. ದೂರದಲ್ಲಿರುವ ಹೊಸಪೇಟೆ ಇಲ್ಲಿಗೆ ಅತಿ ಹತ್ತಿರದ ತಾಲ್ಲೂಕು ಕೇಂದ್ರ. ವ್ಯವಸಾಯ, ವಿರೂಪಾಕ್ಷ ಹಾಗೂ ಕೆಲವು ಇತರ ದೇವಸ್ಥಾನಗಳ ನಿರ್ವಹಣೆ ಮತ್ತು ಪ್ರವಾಸೋದ್ಯಮ, ಇವುಗಳು ಇಲ್ಲಿನ ಮುಖ್ಯ ಚಟುವಟಿಕೆ. ಕರ್ನಾಟಕ ಸರ್ಕಾರವು ಆಯೋಜಿಸುವ ವಿಜಯನಗರ ವಾರ್ಷಿಕೋತ್ಸವವು ಸಾಮಾನ್ಯವಾಗಿ ನವೆಂಬರ್ ತಿಂಗಳಲ್ಲಿ ನಡೆಯುತ್ತದೆ. ಹಂಪೆ ಹಾಗು ಸುತ್ತಮುತ್ತಲಿರುವ ಕೆಲವು ಮುಖ್ಯ ಸ್ಮಾರಕಗಳು ಇಲ್ಲಿರುವ ದೇವಸ್ಥಾನಗಳನ್ನು ನೋಡಲು ಸುಲಭವಾಗುವಂತೆ ಹಲವು ಭಾಗಗಳನ್ನಾಗಿ ವಿಂಗಡಿಸಲಾಗಿದೆ. ಅವೆಂದರೆ- ಕೇಂದ್ರವಾದ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ. ನಡೆದು ನೋಡಬಹುದಾದ ದಾರಿ. ವಾಹನಗಳಲ್ಲಿ ಸಂಚರಿಸಿ ನೋಡಬಹುದಾದ ದಾರಿ. ಸೂರ್ಯಾಸ್ತದ ಸ್ಥಳಗಳು. ಅಚ್ಯುತರಾಯ ದೇಗುಲ ಆನೆಗೊಂದಿ ಅಂಜನಾದ್ರಿ ಪರ್ವತ ವಿರೂಪಾಕ್ಷೇಶ್ವರ ದೇವಾಲಯ ತುಂಗಭದ್ರ ನದಿ ಪುರಂದರ ಮಂಟಪ ವಿಜಯವಿಠ್ಠಲ ದೇಗುಲ ಕಲ್ಲಿನ ತೇರು ಉಗ್ರ ನರಸಿಂಹ ವಿಷಯದ ಬಗ್ಗೆ ಕಡಲೆಕಾಳು ಗಣಪತಿ ಸಾಸಿವೆಕಾಳು ಗಣಪತಿ ರಾಣಿ ಸ್ನಾನಗೃಹ ಹಂಪೆ ಬಜಾರ್ ಹೇಮಕೂಟ ಬಡವಿ ಲಿಂಗ ೯ ಅಡಿಯ ದೇವಸ್ಥಾನವಾಗಿದ್ದು, ಲಕ್ಷ್ಮಿನರಸಿಂಹ ದೇವಸ್ಥಾನದ ಸಮೀಪವೆ ಕಾಣಸಿಗುತ್ತದೆ. ಇದರ ವಿಶಿಷ್ಟತೆಯೆಂದರೆ, ಇದು ಒಂದು ಪ್ರಾಚೀನ ಕಾಲುವೆಯ ಮುಖಾಂತರ ಹರಿದು ಬರುವ ನೀರಿನಿಂದ ಸದಾಕಾಲ ಆವೃತವಾಗಿರುತ್ತದೆ. ಈ ಲಿಂಗದಲ್ಲಿ ಮೂರು ಕಣ್ಣುಗಳನ್ನು ಕೆತ್ತಲಾಗಿದ್ದು, ಭಗವಾನ ಶಿವನ ಮೂರು ನೇತ್ರಗಳನ್ನು ಪ್ರತಿನಿಧಿಸುತ್ತದೆ. ಇದು ಕೂಡ ಭೇಟಿ ಕೊಡಬಹುದಾದಂತಹ ಸ್ಥಳವಾಗಿದೆ. ಸ್ಥಳೀಯರ ನಂಬಿಕೆ ಪ್ರಕಾರ, ಹಂಪಿ ಎಂಬ ಬಡ ಬುಡಕಟ್ಟು ಜನಾಂಗದವನೊಬ್ಬ ತನ್ನ ಆಸೆಗಳನ್ನು ಈಡೇರಿಸಿದರೆ ಒಂದು ಶಿವಲಿಂಗವನ್ನು ಕಟ್ಟುತ್ತೆನೆಂದು ಮಾತು ಕೊಡುತ್ತಾನೆ. ಇದನ್ನರಿತ ಪರಮೇಶ್ವರನು ಅವನ ಆಸೆಗಳನ್ನು ಈಡೇರಿಸಲು ನಿರ್ಧರಿಸಿದ. ತದನಂತರ ಆ ಭಕ್ತನು ಈ ಬಡವಲಿಂಗವನ್ನು ನಿರ್ಮಿಸಿ ಈಶ್ವರನಿಗೆ ಅರ್ಪಿಸಿದ. ಇನ್ನೊಂದು ದಂತಕಥೆಯ ಪ್ರಕಾರ,ಈ ಲಿಂಗವು ಒಬ್ಬ ರೈತ ಮಹಿಳೆಯಿಂದ ನಿರ್ಮಿತವಾಗಿದ್ದು, ಅದಕ್ಕವಳು ಬಡವಿಲಿಂಗ ಎಂದು ನಾಮಕರಣ ಮಾಡಿದ್ದಳು ಎಂದು. ಸಾಸುವೆಕಾಳು ಗಣೇಶ ಹೇಮಕೂಟ ಬೆಟ್ಟದ ಕೆಳಗಿರುವ ಸಾಸಿವೆಕಾಳು ಗಣೇಶ ಗುಡಿಗೆ ಭೇಟಿ ನೀಡಲೇ ಬೇಕು. ಸಾಸಿವೆ ಕಾಳುಗಳನ್ನು ನೆನಪಿಗೆ ತರುವಂತಹ, ಇಲ್ಲಿರುವ ಜನಪ್ರಿಯ ಗಣಪತಿ ವಿಗ್ರಹವು ೮ ಅಡಿ ಉದ್ದವಾಗಿದೆ. ಆದ್ದರಿಂದ ಭಕ್ತ ಸಮೂಹದಲ್ಲಿ, ಇದು ಸಾಸಿವೆಕಾಳು ಗಣೇಶನೆಂಬ ಹೆಸರಿನಿಂದಲೂ ಚಿರಪರಿಚಿತವಾಗಿದೆ. ಪುರಾಣದ ಪ್ರಕಾರ, ಒಮ್ಮೆ ಭಗವಂತ ಗಣೇಶನು, ಮಿತಿ ಮೀರಿ ತಿಂದಿದ್ದರ ಪರಿಣಾಮ ಹೊಟ್ಟೆ ಒಡೆಯುವಂತಾಗಿ, ಅದನ್ನು ತಡೆಯಲು ಸರ್ಪವನ್ನು ಹೊಟ್ಟೆಗೆ ಅಡ್ಡಲಾಗಿ ಸುತ್ತಿಕೊಂಡನೆಂಬುದು ಪ್ರತೀತಿ. ವಿಗ್ರಹವು ಒಂದೆ ಕಲ್ಲಿನಲ್ಲಿ ಕೆತ್ತಲ್ಪಟ್ಟಿದ್ದು, ಬಲಗೈಯಲ್ಲಿ ಮುರಿದ ಆನೆಯ ದಂತ ಮತ್ತು ಅಂಕುಶವನ್ನು ಕಾಣಬಹುದು.ಮೊದಲನೆ ಎಡಗೈ ವಂಕಿಯಾಕಾರದ ಪಾಶವನ್ನು ಹೊಂದಿದ್ದು, ಎರಡನೆ ಎಡಗೈಯ ಮತ್ತು ಸೊಂಡಿಲು ಕಲ್ಲಿನಿಂದ ಬೇರ್ಪಡಿಸಿ ಕೆತ್ತಲಾಗಿದೆ. ಸಾಸಿವೆ ಕಾಳು ಗಣೇಶ ಗುಡಿಯನ್ನು ತಲುಪಿದಾಗ, ವಿಗ್ರಹವು ವಿಶಾಲವಾದ ಆವರಣವನ್ನು ಹೊಂದಿರುವದು ಕಾಣಬಹುದು. ಅಲ್ಲಿ ಕೆತ್ತಲಾಗಿರುವ ಮಾಹಿತಿಯ ಪ್ರಕಾರ, ಇದನ್ನು ಚಂದ್ರಗಿರಿಯ ವ್ಯಾಪರಿಯೊಬ್ಬನು ಕ್ರಿ.ಶ.೧೫೦೬ರಲ್ಲಿ ವಿಜಯನಗರ ಸಾಮ್ರಾಜ್ಯದ ದೊರೆಯಾದ ಎರಡನೇ ನರಸಿಂಹನಿಗೋಸ್ಕರ ಕಟ್ಟಿದನೆಂಬದು ತಿಳಿದು ಬರುತ್ತದೆ. ಕಮಲಾಪುರದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯ ಇಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯವು, ಹಂಪಿಯ ಎರಡು ಮಾದರಿಗಳನ್ನು ಒಳಗೊಂಡಿದ್ದು, ಈ ಪ್ರದೇಶದ ಸ್ಥಳ ವಿವರಣೆಯನ್ನು ವಿವರವಾಗಿ ತಿಳಿಸುತ್ತದೆ. ಆದ್ದರಿಂದ ಪ್ರವಾಸಿಗರು ಈ ಸ್ಥಳಕ್ಕೆ ಭೇಟಿ ನೀಡಿ ತಮಗೆ ಬೇಕಾದ ಮಾಹಿತಿಯನ್ನು ಸುಲಭವಾಗಿ ತಿಳಿಯುತ್ತಾರೆ. ಸಣ್ಣ ಮಾದರಿಯು ಗ್ಯಾಲರಿಯ ಒಳಭಾಗದಲ್ಲಿದ್ದು ರಾಯಲ್ ಸೆಂಟರನ ವಿಸ್ತಾರವಾದ ವಿವರಗಳನ್ನು ನೀಡುತ್ತದೆ.ಈ ಸಂಗ್ರಹಾಲಯವು ಪ್ರಧಾನವಾಗಿ ನಾಲ್ಕು ಭಾಗಗಳನ್ನು ಹೊಂದಿದೆ. ಮೇಲೆ ವಿವರಿಸಿದ ಹಂಪಿಯ ಮಾದರಿಗಳು ಒಂದನೆ ಭಾಗದಲ್ಲಿದ್ದು, ಎರಡನೆ ಭಾಗವು ಹಂಪಿಯ ಅವಶೇಷಗಳಿಗೆ ಸಂಬಂಧಿಸಿದ ಮೂರ್ತಿಗಳು ಹಾಗು ಶಿಲಾಕೃತಿಗಳನ್ನು ಹೊಂದಿದೆ. ಮೂರನೆ ಭಾಗವು ಆಗಿನ ಕಾಲದಲ್ಲಿ ಉಪಯೋಗಿಸಲ್ಪಡುತ್ತಿದ್ದ ಯುದ್ಧ ಸಲಕರಣೆಗಳು,ನಗನಾಣ್ಯಗಳು ಮತ್ತು ಇತರೆ ಸಾಮಗ್ರಿಗಳನ್ನು ಹೊಂದಿದೆ. ನಾಲ್ಕನೆ ಭಾಗವು ಇತಿಹಾಸದ ಪೂರ್ವ ಹಾಗು ನಂತರದ ವಸ್ತುಗಳನ್ನು ಹೊಂದಿದೆ. ಹಿರೊ ಕಲ್ಲುಗಳು, ಸತಿ ಕಲ್ಲುಗಳು,ಚಿಕ್ಕದಾದ ರಾಯಲ್ ಸೆಂಟರ್ ಪ್ರತಿರೂಪ, ಪಿಂಗಾಣಿ ವಸ್ತುಗಳು ಮತ್ತು ಗೋಡೆಯ ಅಲಂಕಾರಿಕ ವಸ್ತುಗಳನ್ನು ಹೊಂದಿದೆ. ಈ ಸಂಗ್ರಹಾಲಯವು ಪ್ರತಿ ಶುಕ್ರವಾರ ಹಾಗು ರಾಷ್ಟ್ರೀಯ ರಜಾ ದಿನಗಳಂದು ಮುಚ್ಚಿರುತ್ತದೆ. ಉಳಿದ ದಿನಗಳಲ್ಲಿ ಇದರ ಸಮಯ ಬೆಳಿಗ್ಗೆ ೧೦ ರಿಂದ ಸಂಜೆ ೫ ರ ವರೆಗೆ. ನೀವು ಹಂಪಿಗೆ ಹೋಗುತ್ತಿರಾದರೆ, ಖಂಡಿತವಾಗಿಯೂ ಇದಕ್ಕೆ ಭೇಟಿ ನೀಡಿ. ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನ ಶ್ರೀ ಲಕ್ಷ್ಮಿನರಸಿಂಹ ಗುಡಿಯಲ್ಲಿ, ೬.೭ಮೀ. ಎತ್ತರವಿರುವ ಒಂದೆ ಕಲ್ಲಿನಲ್ಲಿ ಕೆತ್ತಲಾದ, ನರಸಿಂಹನ(ಭಗವಾನ ವಿಷ್ಣುವಿನ ಅವತಾರ) ವಿಗ್ರಹವು ಆದಿಶೇಷನ(ಎಳು ಹೆಡೆಯ ಸರ್ಪ) ಮೇಲೆ ವಿಶ್ರಮಿಸುವ ಭಂಗಿಯಲ್ಲಿದ್ದು, ಇಲ್ಲಿಗೆ ಬರುವ ಪ್ರವಾಸಿಗರಲ್ಲಿ ಹೆಸರುವಾಸಿಯಾಗಿದೆ. ಇಲ್ಲಿ ಕೆತ್ತಲಾಗಿರುವ ಮಾಹಿತಿಯ ಪ್ರಕಾರ, ಇದನ್ನು, ಕ್ರಿ.ಶ.೧೫೨೮ರಲ್ಲಿ ದೊರೆಯಾದ ಕೄಷ್ಣದೇವರಾಯನ ಆಳ್ವಿಕೆಯಲ್ಲಿ ಪೂರ್ಣಗೊಳಿಸಲಾಯಿತೆಂದು ತಿಳಿದು ಬರುತ್ತದೆ.ಮೂಲ ವಿಗ್ರಹವು ಲಕ್ಷ್ಮಿ ದೇವತೆಯು ವಿಷ್ಣುವಿನ ತೊಡೆಯಲ್ಲಿ ಕುಳಿತಿರುವ ಭಂಗಿಯಲ್ಲಿದೆ.ಆದರೆ, ಕ್ರಿ.ಶ.೧೫೬೫ರಲ್ಲಿ, ಲಕ್ಷ್ಮಿ ದೇವತೆಯ ವಿಗ್ರಹವು ನಾಶ ಹೊಂದಿದ್ದು, ಪ್ರಸ್ತುತ ಅದನ್ನು ಕಮಲಾಪುರ ಸಂಗ್ರಹಾಲಯದಲ್ಲಿ ಇರಿಸಲಾಗಿದೆ. ಆದರೂ ಉಬ್ಬಿರುವ ಕಣ್ಣುಗಳನ್ನು ಚಿತ್ರಿಸಲಾಗಿರುವ ನರಸಿಂಹನ ವಿಗ್ರಹವು ಇಂದಿಗೂ ಕೂಡ ಬಹುಪಾಲು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನರಸಿಂಹ ಹಾಗು ಲಕ್ಷ್ಮಿ ದೇವತೆಯ ವಿಗ್ರಹಗಳನ್ನು ಒಂದೆ ಕಲ್ಲಿನಿಂದ ಕೆತ್ತಲಾಗಿದೆ. ಸಾಮಾನ್ಯವಾಗಿ ದಕ್ಷಿಣ ಭಾರತದ ವಾಸ್ತುಶಿಲ್ಪಿಗಳು ಉಪಯೋಗಿಸುವ ಸಾಮಗ್ರಿಗಳ ವಿರುದ್ಧವಾಗಿ,ಸಂಗಮರು ಗ್ರಾನೈಟ್ ಕಲ್ಲುಗಳಿಂದ ಲಕ್ಷ್ಮಿನರಸಿಂಹ ದೇವಾಲಯವನ್ನು ಕಟ್ಟಿದ್ದಾರೆ. ಆದರೆ ಕೆಲವು ಸೂಕ್ಶ್ಮವಾದ ಕೆಲಸಗಳನ್ನು ಸ್ಚಿಸ್ಟ(ಒಂದು ಮೃದುವಾದ ಕಲ್ಲು)ನಿಂದ ಮಾಡಲ್ಪಟ್ಟಿದ್ದು ಗ್ರಾನೈಟ್ ಬಳಕೆ ಮಾಡಲಾಗಿಲ್ಲ. ಜಟಿಲವಾದ ವಿನ್ಯಾಸಗಳ ಅಭಾವವನ್ನು ಸರಿದೂಗಿಸಲು, ವಾಸ್ತುಶಿಲ್ಪಗಾರರು ವಿಶಾಲವಾದ ಕಟ್ಟಡವನ್ನು ನಿರ್ಮಿಸಲು ನಿಶ್ಚಯಿಸಿದ್ದಾರೆ. ವಿರೂಪಾಕ್ಷ ದೇವಾಲಯ ವಿರೂಪಾಕ್ಷ ದೇವಾಲಯವು ಶಿವ ಹಾಗು ಅವನ ಸಂಗಾತಿ ದೇವತೆಯಾದ ಪಂಪಾಳಿಗೆ ಸಮರ್ಪಿತವಾಗಿದ್ದು, ಹಂಪಿಗೆ ಬರುವ ಪ್ರವಾಸಿಗರು ಇದಕ್ಕೆ ಭೇಟಿ ನೀಡಬಹುದು. ೫೦ ಮೀ. ಎತ್ತರದ ಗೋಪುರವನ್ನು ಹೊಂದಿರುವ ಈ ದೇವಾಲಯವು ತುಂಗಭದ್ರ ನದಿಯ ದಕ್ಷಿಣ ದಡದಲ್ಲಿರುವ ಹೇಮಕೂಟ ಬೆಟ್ಟದ ಕೆಳಭಾಗದಲ್ಲಿದೆ. ದಕ್ಷಿಣ ಭಾರತದ ದ್ರಾವಿಡಿಯನ್ ಶೈಲಿಯನ್ನು ಹೊಂದಿರುವ ಈ ದೇವಾಲಯವು ಇಟ್ಟಿಗೆ ಹಾಗೂ ಮೊರ್ಟಾರ್ ಗಳಿಂದ ರಚಿಸಲ್ಪಟ್ಟಿದೆ. ಪಂಪಾಪತಿ ದೇವಾಲಯವೆಂದೂ, ಕರೆಯಲ್ಪಡುವ ಈ ದೇವಾಲಯವು ಮುಖ ಮಂಟಪ(ರಂಗ ಮಂಟಪ), ಮುರು ಭಾಗಗಳು ಮತ್ತು ಕಂಬಗಳುಳ್ಳ ವಿಶಾಲವಾದ ಕೊಠಡಿಯನ್ನು ಹೊಂದಿದೆ. ವಿರೂಪಾಕ್ಷ ದೇವಾಲಯವು 7ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು, ಕೆತ್ತನೆಯ ಕೆಲಸವು ಸುಮಾರು ೯ ಹಾಗು ೧೧ ನೇ ಶತಮಾನಗಳ ಮಧ್ಯದಲ್ಲಿ ಮಾಡಲ್ಪಟ್ಟಿವೆ ಎಂಬುದನ್ನು ಅಲ್ಲಿ ಭೇಟಿ ನೀಡಿದಾಗ ತಿಳಿಯಬಹುದು. ಪ್ರಾರಂಭದಲ್ಲಿ, ಈ ದೇವಾಲಯವು ಕೆಲವೆ ವಿಗ್ರಹಗಳನ್ನು ಹೊಂದಿದ್ದು ಕಾಲಾಕ್ರಮೇಣವಾಗಿ ಬೃಹದಾಕಾರವನ್ನು ಪಡೆಯಿತು. ಕ್ರಿ.ಶ.೧೫೧೦ ರಲ್ಲಿ, ಕೃಷ್ಣದೇವರಾಯರಿಂದ, ರಂಗಮಂಟಪವು ನಿರ್ಮಿಸಲ್ಪಟ್ಟಿದ್ದು ವಿಜಯನಗರದ ಶೈಲಿಯ ವಾಸ್ತುಶಿಲ್ಪವನ್ನು ಸೂಚಿಸುತ್ತದೆ. ತದನಂತರ ಕಂಬಗಳು, ದೀಪಸ್ಥಂಬಗಳು, ಸ್ತೂಪಗಳನ್ನು ನಿರ್ಮಿಸಲಾಯಿತು. ಹಿಂದು ಸಂಸ್ಕೃತಿಯನ್ನು ಬಿಂಬಿಸುವಂತಹ ಪ್ರಾಣಿ ಪಕ್ಷಿಗಳ ಕೆತ್ತನೆಗಳು ವಿರೂಪಾಕ್ಷ ದೇವಾಲಯದ ಪ್ರಮುಖ ಆಕರ್ಷಣೆ. ಜೆನಾನಾ ಎನ್ಕ್ಲೊಸರ್ ಎತ್ತರನೆಯ ಕಲ್ಲಿನ ಗೋಡೆಗಳಿಂದ ಸುತ್ತುವರೆಯಾಗಿ ನಿರ್ಮಿಸಲಾದ ಜೆನಾನಾ ಎನ್ಕ್ಲೊಸರ್, ಹಂಪಿಯಲ್ಲಿ ಪ್ರವಾಸಿಸುವಾಗ ನೋಡಲೆ ಬೇಕಾದ ಒಂದು ಸ್ಥಳ. ಈ ಸ್ಥಳವು ಕೇವಲ ಮಹಿಳೆಯರ ಪ್ರವೇಶಕ್ಕೆ ಮಾತ್ರವಿದ್ದು, ಅವರ ಗೌಪ್ಯತೆಯನ್ನು ಕಾಪಾಡುವ ರೀತಿಯಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ನಾಲ್ಕು ಪ್ರಧಾನ ರಚನೆಗಳಿದ್ದು, ಅವುಗಳೇ ಮಹಾರಾಣಿ ಅರಮನೆ(ಕ್ವೀನ್ಸ್ ಪ್ಯಾಲೇಸ್), ಎರಡು ನಿರೀಕ್ಷಣಾ ಗೋಪುರಗಳು ಹಾಗು ಜನಪ್ರೀಯವಾದ ಲೊಟಸ್ ಮಹಲ್. ಈ ಕಟ್ಟಡಕ್ಕೆ ಅನೇಕ ಕಿಂಡಿಗಳಿದ್ದು, ರಾಣಿಯರ ಬೇಸಿಗೆ ಅರಮನೆಯಾಗಿತ್ತು. ಕ್ವೀನ್ಸ ಪ್ಯಾಲೇಸ್ ೪೬*೨೯ ಮೀ. ಅಳತೆ ಹೊಂದಿದ್ದು ಕಟ್ಟಿಗೆ ಹಾಗು ಇತರೆ ಸಾಮಗ್ರಿಗಳಿಂದ ನಿರ್ಮಿಸಲ್ಪಟ್ಟಿದೆ.ಇತಿಹಾಸಕಾರರ ಪ್ರಕಾರ, ಈ ಸ್ಥಳವು ಕೇವಲ ಮಹಿಳೆಯರಿಗಾಗಿ ಮಾತ್ರ ಮೀಸಲಾಗಿದ್ದುದರಿಂದ, ಇದರ ರಕ್ಷಣೆಯು ನಪುಂಸಕ ಸೈನಿಕರಿಂದ ಮಾಡಲ್ಪಡುತ್ತಿತ್ತು. ಉತ್ತರ ಹಾಗು ಆಗ್ನೇಯ ದಿಕ್ಕಿನಲ್ಲಿ ಕಟ್ಟಲಾದ ಎರಡು ಕಟ್ಟಡಗಳು ನಿರೀಕ್ಷಣಾ ಗೋಪುರಗಳಾಗಿ ನಿರ್ವಹಿಸಲ್ಪಡುತ್ತಿದ್ದವು. ಈ ಕಟ್ಟಡಗಳಿಂದ ಮಹಾರಾಣಿ ಹಾಗು ಆಕೆಯ ಕುಟುಂಬದ ಸದಸ್ಯರು ಹೊರಗೆ ನಡೆಯುತ್ತಿದ್ದ ಚಟುವಟಿಕೆಗಳನ್ನು ವೀಕ್ಷಿಸುತ್ತಿದ್ದರು. ಇಂಡೊ-ಇಸ್ಲಾಮಿಕ್ ಮಾದರಿಯ ವಾಸ್ತುಶಿಲ್ಪವುಳ್ಳ ಲೊಟಸ್ ಪ್ಯಾಲೇಸ್ ರಾಜ ಮಹಿಳೆಯರು ಸಂಧಿಸಿ ದಿನಕಳೆಯುವ ಸ್ಥಳವಾಗಿತ್ತು. ರಾಜಮನೆತನದ ಆನೆಗಳು ವಿರಮಿಸುತ್ತಿದ್ದ ಸ್ಥಳವಾದ ಎಲಿಫಂಟ್ ಸ್ಟೇಬಲ್ಸ್ ಇದರ ಹಿಂಬದಿಯಲ್ಲಿದ್ದು, ಪ್ರವಾಸಿಗರು ಭೇಟಿ ನೀಡಬಹುದು. ಆನೆಗೊಂದಿ (ಆನೆಗುಂಡಿ) ಆನೆಗುಂಡಿ ಹಳ್ಳಿಯು ಹಂಪಿಯಿಂದ ೧೦ ಕಿ.ಮೀ ದೂರದಲ್ಲಿದ್ದು, ತುಂಗಭದ್ರಾ ನದಿಯ ಉತ್ತರ ಭಾಗದ ದಡದಲ್ಲಿದೆ. ಇದು ಅಂದಿನ ವಿಜಯನಗರ ಸಾಮ್ರಾಜ್ಯದ ಪ್ರಾದೇಶಿಕ ರಾಜಧಾನಿಯಾಗಿತ್ತು. ಇದರ ಅರ್ಥ ಕನ್ನಡದಲ್ಲಿ ಆನೆಗೆ ತೋಡಿದ ಗುಂಡಿ ಎಂದಾಗುತ್ತದೆ. ಈ ಪ್ರದೇಶವು ಹಂಪಿಗಿಂತಲೂ ಪ್ರಾಚೀನವಾಗಿದ್ದು, ರಾಮಾಯಣದ ಪ್ರಕಾರ ಇದನ್ನು ಸುಗ್ರೀವನ (ಮಂಗಗಳ ರಾಜ) ರಾಜ್ಯ ಕಿಷ್ಕಿಂಧೆ ಎಂದು ನಂಬಲಾಗಿದೆ. ಸಮಯಾವಕಾಶವಿದ್ದರೆ ಪ್ರವಾಸಿಗರು ಖಂಡಿತವಾಗಿಯು ಈ ಸ್ಥಳಕ್ಕೆ ಭೇಟಿ ನೀಡಿ ಅಂಜನಾದ್ರಿ ಬೆಟ್ಟವನ್ನು ನೋಡಬಹುದು. ಈ ಬೆಟ್ಟವನ್ನು ದೇವರಾದ ಹನುಮಂತನ ಹುಟ್ಟು ಸ್ಥಳವೆಂದು ನಂಬಲಾಗಿದೆ. ಹಂಪಿಗಿಂತಲೂ ನೆಮ್ಮದಿಯಾದಂಥ ವಾತಾವರಣವನ್ನು ಆನೆಗುಂಡಿಯು ಹೊಂದಿದೆ. ಪ್ರಾಚ್ಯವಸ್ತು ಸಂರಕ್ಷಣಾ ಯೋಜನೆ ಮತ್ತು ಕಿಷ್ಕೀಂದ ಟ್ರಸ್ಟ್ ಇವುಗಳು, ಇಲ್ಲಿಗೆ ಬರುವ ಪ್ರವಾಸಿಗರಿಗೆ ಅತ್ಯುತ್ತಮವಾದ ವ್ಯವಸ್ಥೆಗಳನ್ನು ಕಲ್ಪಿಸಿದ್ದು, ಆದರಾತಿಥ್ಯವು ಮನಸೂರೆಗೊಳಿಸುತ್ತದೆ. ಹೊಸ ಸೇತುವೆ(ಬ್ರಿಡ್ಜ್) ಅನ್ನು ತುಂಗಭದ್ರಾ ನದಿಗೆ ಕಟ್ಟಲಾಗುತಿತ್ತು , ಆದರೆ ಅದು ಮುರಿದು ಬಿದ್ದಿದ್ದು ಇನ್ನೊಂದು ಕಡೆ ಸೇತುವೆ ಕಟ್ಟುವ ಕೆಲಸ ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ, ಪ್ರವಾಸಿಗರು ಆನೆಗುಂಡಿಯನ್ನು ಸುಲಭವಾಗಿ ತಲುಪಬಹುದಾಗಿದೆ. ಸದ್ಯ, ಈ ಪ್ರದೇಶವನ್ನು ಸುತ್ತು ಮಾರ್ಗದಿಂದ ತಲುಪಬಹುದಾಗಿದೆ. ಆನೆಗುಂದಿಯ ಕೆಲವು ಪ್ರಮುಖ ಆಕರ್ಷಣೆಗಳು ಗಗನ ಪ್ಯಾಲೇಸ್, ಪಂಪ ಸರೋವರ ಲಕ್ಷ್ಮಿದೇವಾಲಯ, ಶ್ರೀಕೄಷ್ಣದೇವರಾಯ ಸಮಾಧಿ, ಆನೆಗುಂದಿ ಕೋಟೆಯ ಹೆಬ್ಬಾಗಿಲು ಹಾಗು ಏಳು ತಲೆಯ ಸರ್ಪ ಇವು ಆನೆಗುಂದಿಯ ಕೆಲವು ಪ್ರಮುಖ ಆಕರ್ಷಣೆಗಳು. ಇಷ್ಟೇ ಅಲ್ಲದೆ ಪ್ರವಾಸಿಗರು- ಶ್ರೀ ಗವಿ ರಂಗನಾಥ ಸ್ವಾಮಿ ದೇವಸ್ಥಾನ, ಗಣಪತಿ ದೇವಸ್ಥಾನ, ಚಿಂತಾಮಣಿ ಶಿವ ದೇವಸ್ಥಾನ, ಹುಚ್ಚೈಪ್ಪನ ಮಠ ಮತ್ತು ಜೈನ್ ದೇವಾಲಯಗಳಿಗೂ ಕೂಡ ಭೇಟಿ ನೀಡಬಹುದು. ಇವನ್ನೂ ನೋಡಿ ವಿಜಯನಗರ ಬೊಮ್ಮಘಟ್ಟ ಹೊರಗಿನ ಸಂಪರ್ಕಗಳು ಹಂಪಿಯಲ್ಲಿರುವ ಸ್ಮಾರಕಗಳು - ಯುನೆಸ್ಕೊ ಪುಟ ಕರ್ನಾಟಕ ಡಾಟ್ ಕಾಮ್ - ಹಂಪಿ ಪುಟ ಪ್ರವಾಸಿಗರೊಬ್ಬರ ಬರಹ ಪಳೆಯುಳಿಕೆಗಳು - ಬರಹ, ಚಿತ್ರಗಳು ಇನ್ನಷ್ಟು ಚಿತ್ರಗಳು ಮತ್ತು ಮಾಹಿತಿ www.ಹಂಪೆ.in http://www.incrediblehampi.org/ ] Archaeological Survey of India Museum Hampi Group of Monuments at Hampi - UNESCO World Heritage List www.HAMPI.in Hampi Online Hampi: Tenali's Wonderful Town Hampi, “A Forgotten Empire” Hampi. Kala Darshana Hampi in the News. The Times of India September 2012. Global Heritage Fund Explore Hampi with Google Earth. Global Heritage Fund Hampi @ Karnataka.com http://www.malligihotels.com/monuments.html Hampi Photographs, 2013 Elephant Stables Photographs, 2013 360 degree spherical panoramas of the Monkey temple ವಿಶ್ವ ಪರಂಪರೆಯ ತಾಣಗಳು ಕರ್ನಾಟಕದ ಪ್ರಮುಖ ಸ್ಥಳಗಳು ಬಳ್ಳಾರಿ ಜಿಲ್ಲೆ ಬಳ್ಳಾರಿ ಜಿಲ್ಲೆಯ ಪ್ರವಾಸಿ ತಾಣಗಳು ಕರ್ನಾಟಕದ ಏಳು ಅದ್ಭುತಗಳುಭಾರತದ ಹಿಂದಿನ ರಾಜಧಾನಿ ನಗರಗಳು
939
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B2%A6%20%E0%B2%B0%E0%B2%BE%E0%B2%B7%E0%B3%8D%E0%B2%9F%E0%B3%8D%E0%B2%B0%E0%B2%97%E0%B3%80%E0%B2%A4%E0%B3%86
ಭಾರತದ ರಾಷ್ಟ್ರಗೀತೆ
ಭಾರತದ ರಾಷ್ಟ್ರಗೀತೆ - ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಬರೆದ ಗೀತೆ. ಅವರು ಸಂಸ್ಕೃತ ಮಿಶ್ರಿತ ಬಂಗಾಳಿಯಲ್ಲಿ ಬರೆದ ಬ್ರಹ್ಮೋ ಮಂತ್ರದ ಮೊದಲ ೫ ಪ್ಯಾರಾಗಳನ್ನೇ ನಾವೀಗ ಹಾಡುತ್ತಿರುವುದು.ಈ ಗೀತೆಯನ್ನು ಜನವರಿ ೨೪, ೧೯೫೦ರಲ್ಲಿ ಭಾರತ ಸರಕಾರವು ರಾಷ್ಟ್ರಗೀತೆ ಎಂದು ಘೋಷಿಸಿತು. ಇದಕ್ಕೆ ಸಂಗೀತ ಅಳವಡಿಸಿದ್ದು ರಾಮ್ ಸಿಂಗ್ ರಾಕೂರ್. ರಾಷ್ಟ್ರಗೀತೆಯನ್ನು ರಾಷ್ಟ್ರ ಧ್ವಜವನ್ನು ಹಾರಿಸಿದ ನಂತರ ೫೨ ಸೆಕೆಂಡುಗಳಿಗೆ ಮೀರದಂತೆ ಹಾಡಿ ಮುಗಿಸಬೇಕು. ರಾಷ್ಟ್ರಗೀತೆ ಹಾಡುವಾಗ ಎಲ್ಲರೂ ಎದ್ದು ನಿಂತು ಭಾರತ ಮಾತೆಗೆ ವಂದಿಸಬೇಕು. ರಾಷ್ಟ್ರಗೀತೆ ಹಾಡುವುದನ್ನು ಅಡ್ಡಿಪಡಿಸಿದರೆ ನಮ್ಮ ಕಾನೂನಿನಲ್ಲಿ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲ್ಪಡುತ್ತದೆ. ಭಾರತದ ರಾಷ್ಟ್ರಗೀತೆ "ಜನ ಗಣ ಮನ" ಕನ್ನಡದಲ್ಲಿ ಈ ಮುಂದಿನಂತಿದೆ: ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶದಲ್ಲಿರುವ ವಿವರ ಭಾರತದ ರಾಷ್ಟ್ರಗೀತೆ - ಜನಗಣಮನ ಅಧಿನಾಯಕ ಜಯಹೇ ಭಾರತದ ರಾಷ್ಟ್ರಗೀತೆ. ರವೀಂದ್ರನಾಥ ಠಾಕೂರ್ ಅವರು 1911ರಲ್ಲಿ ಬಂಗಾಲಿ ಭಾಷೆಯಲ್ಲಿ ರಚಿಸಿದ ದೀರ್ಘಗೀತೆಯ ಐದುಪದ್ಯಗಳಲ್ಲಿ ಮೊದಲ ಪದ್ಯದ ಸಾಲುಗಳನ್ನು ಮಾತ್ರ ಆಯ್ದಕೊಂಡು ಈ ರಾಷ್ಟ್ರಗೀತೆಯನ್ನು ರೂಪಿಸಲಾಯಿತು. ಸ್ವತಂತ್ರ ಭಾರತದ ಸಂವಿಧಾನ ರಚನಾಸಭೆ 1950 ಜನವರಿ 24ರಂದು ಇದನ್ನು ರಾಷ್ಟ್ರಗೀತೆ ಎಂದು ಅಂಗೀಕರಿಸಿತು. ಠಾಕೂರ್ ಸಂಪಾದಕರಾಗಿದ್ದ ತತ್ತ್ವಬೋಧಿನಿ ಪತ್ರಿಕಾ ಎಂಬ ಪತ್ರಿಕೆಯಲ್ಲಿ ಇದು 1912ರಲ್ಲಿ ಮೊದಲಿಗೆ ಪ್ರಕಟವಾಗಿತ್ತು. ಪ್ರಕಟಣೆಗೆ ಮೊದಲು ಈ ಗೀತೆಯನ್ನು 27 ಡಿಸೆಂಬರ್ 1911ರಂದು ಕಲ್ಕತ್ತದಲ್ಲಿ ನೆರೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಗಿತ್ತು. ಠಾಕೂರ್ ಅವರು ಇದನ್ನು 'ಮಾರ್ನಿಂಗ್ ಸಾಂಗ್ ಆಫ್ ಇಂಡಿಯಾ ಎಂಬ ಹೆಸರಿನಲ್ಲಿ 1919ರಲ್ಲಿ ಇಂಗ್ಲಿಷಿಗೆ ಅನುವಾದಿಸಿದ್ದರು. ಇದು ಭಾರತ ಇಬ್ಬಾಗವಾಗುವುದಕ್ಕೆ ಮೊದಲು ಬರೆದ ಗೀತೆಯಾದರೂ ಇದರಲ್ಲಿ ಬರುವ ರಾಷ್ಟ್ರದ ವಿವಿಧ ಪ್ರದೇಶಗಳ ಹೆಸರುಗಳನ್ನು ಬದಲಾಯಿಸಿಲ್ಲ; ಈ ಹೆಸರುಗಳು ವಿವಿಧ ಭಾರತೀಯ ಜನಾಂಗಗಳನ್ನು ಸೂಚಿಸುತ್ತವೆ. ಹಾಗಾಗಿ ಈ ಗೀತೆಯನ್ನು ರಾಷ್ಟ್ರಗೀತೆಯಾಗಿ ಅಂಗೀಕರಿಸಿದಾಗ ಮೂಲಗೀತೆಯಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಯಥಾವತ್ತಾಗಿ ಉಳಿಸಿಕೊಳ್ಳಲಾಯಿತು. ರಾಷ್ಟ್ರಗೀತೆಗೆ ಗೌರವಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಅಗೌರವ ಸೂಚಿಸುವುದು, ಅದರ ಹಾಡುವಿಕೆಗೆ ಅಡ್ಡಿಪಡಿಸುವುದು ಶಾಸನದ ಪ್ರಕಾರ ಶಿಕ್ಷಾರ್ಹ ಅಪರಾಧ. ವೈವಿಧ್ಯದಲ್ಲಿ ಏಕತೆ ಭಾರತೀಯ ಸಂಸ್ಕ್ರತಿಯ ವೈಶಿಷ್ಟ್ಯ ಎಂಬುದಕ್ಕೆ ಈ ಗೀತೆ ಸಂಕೇತವಾಗಿದೆ. ಗೀತೆಯನ್ನು ಹಾಡಲು ಬೇಕಾಗುವ ಕಾಲಾವಧಿ ಸುಮಾರು 52 ಸೆಕೆಂಡುಗಳು. ಉಲ್ಲೇಖ ಭಾರತ
940
https://kn.wikipedia.org/wiki/%E0%B2%AA%E0%B3%8D%E0%B2%B0%E0%B2%9C%E0%B2%BE%E0%B2%B5%E0%B2%BE%E0%B2%A3%E0%B2%BF
ಪ್ರಜಾವಾಣಿ
ಪ್ರಜಾವಾಣಿ ಕರ್ನಾಟಕದ ಪ್ರಮುಖ ದಿನಪತ್ರಿಕೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು. ಪ್ರಜಾವಾಣಿಯಲ್ಲಿ ಪ್ರಚಲಿತ ರಾಜಕೀಯ, ಆರ್ಥಿಕ ವಿಷಯಗಳನ್ನು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತದೆ. ಇತಿಹಾಸ ಸ್ವಾತಂತ್ರ್ಯಾನಂತರ ಪ್ರಾರಂಭವಾದ ಕನ್ನಡ ದಿನಪತ್ರಿಕೆಗಳಲ್ಲಿ ಪ್ರಜಾವಾಣಿ ಪ್ರಮುಖವಾದುದು.೧೯೪೮ರಲ್ಲಿ ಇಂಗ್ಲಿಷ್ ದಿನಪತ್ರಿಕೆ "ಡೆಕ್ಕನ್ ಹೆರಾಲ್ಡ್"ನೊಂದಿಗೆ, ಶ್ರೀ ಕೆ.ಎನ್. ಗುರುಸ್ವಾಮಿಯವರ ಮಾಲೀಕತ್ವದ ದಿ ಪ್ರಿಂಟರ್ಸ್ ಮೈಸೂರು ಲಿ. ಪ್ರಜಾವಾಣಿಯನ್ನು ಪ್ರಾರಂಭಿಸಿತು. ಬಿ.ಪುಟ್ಟಸ್ವಾಮಯ್ಯನವರ ಸಂಪಾದಕತ್ವದಲ್ಲಿ ಮೊದಲಾಗಿ ಪ್ರಸಕ್ತ ಕೆ.ಎನ್. ಶಾಂತ ಕುಮಾರ್ ರವರೆಗೆ ಪ್ರಜಾವಾಣಿ ಅವಿರತವಾಗಿ ಸಾಗಿದೆ. ಸಂಪಾದಕರು ಬಿ.ಪುಟ್ಟಸ್ವಾಮಯ್ಯನವರು ಖಾದ್ರಿ ಶಾಮಣ್ಣ ಟಿಯೆಸ್ಸಾರ್ ಎಂ.ಬಿ.ಸಿಂಗ್ ಕೆ.ಎನ್. ಹರಿಕುಮಾರ್ ಕೆ.ಎನ್. ಶಾಂತ ಕುಮಾರ್ ಕೆ.ಎನ್.ತಿಲಕ್ ಕುಮಾರ್. ಕೆ.ಎನ್.ಶಾಂತ ಕುಮಾರ್ ಸಹ ಸಂಪಾದಕರು ಪಿ.ರಾಮಣ್ಣ ಬಿ.ಎಂ.ಕೃಷ್ಣಸ್ವಾಮಿ ಜಿ.ಎನ್.ರಂಗನಾಥರಾವ್, ಕೆ. ಶ್ರೀಧರ ಆಚಾರ್ ರಾಜಾ ಶೈಲೇಶ್ಚಂದ್ರ ಗುಪ್ತ ಆರ್. ಪಿ. ಜಗದೀಶ ಪದ್ಮರಾಜ ದಂಡಾವತಿ ಸಹಾಯಕ ಸಂಪಾದಕರು ಮಾಗಡಿ ಗೋಪಾಲಕಣ್ಣನ್ ಶ್ರೀಧರ ಕೃಷ್ಣಮುರ್ತಿ ಜಿ.ಎಸ್. ಸದಾಶಿವ ಡಿ.ವಿ. ರಾಜಶೇಖರ ಲಕ್ಷ್ಮಣ ಕೊಡಸೆ ಶಿವಾಜಿ ಗಣೇಷನ್ ಇ.ವಿ.ಸತ್ಯನಾರಾಯಣ ಮೊದಲಾದವರು. ಸಾಪ್ತಾಹಿಕ ಪುರವಣಿ ಉಸ್ತುವಾರಿ ಬಿ.ವಿ.ವೈಕುಂಠರಾಜು ಜಿ.ಎನ್.ರಂಗನಾಥ ರಾವ್ ಡಿ.ವಿ. ರಾಜಶೇಖರ ಗಂಗಾಧರ ಮೊದಲಿಯಾರ್ ಪ್ರೇಮಕುಮಾರ್ ಹರಿಯಬ್ಬೆ ಲಕ್ಷ್ಮಣ ಕೊಡಸೆ ರಘುನಾಥ ಚ.ಹ ದಿನವೂ ಒಂದು ಪುರವಣಿ ಇರುವ ಕನ್ನಡದ ಪ್ರಮುಖ ಪತ್ರಿಕೆ ಪ್ರಜಾವಾಣಿ. ಭಾನುವಾರದ ಸಾಪ್ತಾಹಿಕ ಪುರವಣಿ ಸಾಹಿತ್ಯ- ಸಂಸ್ಕ್ರತಿಯ ವೇದಿಕೆ. ಕಥೆ, ಕವನ, ವಿಮರ್ಶೆ, ಹೊಸ ಪುಸ್ತಕ, ಪರಿಚಯ, ಮಕ್ಕಳ ಪುಟ ಜನಪ್ರಿಯವಾಗಿವೆ. ಸೋಮವಾರಕ್ಕೆ ಮೆಟ್ರೊ ಇದೆ. ಮಂಗಳವಾರ ಕ್ರೀಡೆ ಮತ್ತು ಶಿಕ್ಷಣ ಪುರವಣಿ, ಬುಧವಾರಕ್ಕೆ ವಾಣಿಜ್ಯ ಪುರವಣಿ, ಗುರುವಾರಕ್ಕೆ ಕರ್ನಾಟಕ ದರ್ಶನ, ಶುಕ್ರವಾರಕ್ಕೆ ಸಿನಿಮಾ ಕಿರುತೆರೆ, ಶನಿವಾರಕ್ಕೆ ಭೂಮಿಕಾ ಮತ್ತು ಆರೋಗ್ಯ ಪುಟಗಳಿವೆ. ಹೊರಗಿನ ಸಂಪರ್ಕಗಳು ಪ್ರಜಾವಾಣಿ ಅಂತರ್ಜಾಲ ಆವೃತ್ತಿ ಪ್ರಜಾವಾಣಿ ಇ-ಪೇಪರ್ ಆವೃತ್ತಿ ಕನ್ನಡ ಪತ್ರಿಕೆಗಳು ಕನ್ನಡ ದಿನಪತ್ರಿಕೆಗಳು ಪತ್ರಿಕೋದ್ಯಮ
945
https://kn.wikipedia.org/wiki/%E0%B2%B5%E0%B3%80%E0%B2%B0%E0%B2%AA%E0%B3%8D%E0%B2%AA%E0%B2%A8%E0%B3%8D
ವೀರಪ್ಪನ್
ಕೂಸೆ ಮುನಿಸ್ವಾಮಿ ವೀರಪ್ಪನ್ (ಜನವರಿ ೧೮, ೧೯೫೨ - ಅಕ್ಟೋಬರ್ ೧೮, ೨೦೦೪) - ಭಾರತದ ಕುಖ್ಯಾತ ದಂತಚೋರ, ನರಹಂತಕ. ತಮಿಳುನಾಡು ಹಾಗೂ ಕರ್ನಾಟಕದ ಮಧ್ಯೆ ಇರುವ ಸುಮಾರು ೬,೦೦೦ ಚದುರ ಕಿ.ಮೀ. ಕಾಡಿನಲ್ಲಿ ಜೀವನಪರ್ಯಂತ ವಾಸಿಸಿದ ಇವನು, ಅಲ್ಲಿಯೇ ತನ್ನ ಕಾರುಬಾರು ನೆಡೆಸುತ್ತಿದ್ದ. ಸುಮಾರು ೧೨೦ಕ್ಕೂ ಹೆಚ್ಚು ಜನರ ಕೊಲೆಗೆ ಕಾರಣವಾಗಿದ್ದ ಇವನು ಪೋಲಿಸರ ಕಣ್ಣಿಗೆ ಚಳ್ಳೆ ಹಣ್ಣು ತಿನ್ನಿಸುತ್ತಾ ಕಾಡಿನಲ್ಲಿದ್ದ ಆನೆಗಳ ಹತ್ಯೆ ಮಾಡುತ್ತಾ, ದಂತವನ್ನು, ಹಾಗೂ ಶ್ರೀಗಂಧವನ್ನು ಅಕ್ರಮವಾಗಿ ಸಾಗಿಸುತ್ತಿದ್ದನು. ಇವನ ತಲೆಯ ಮೇಲೆ ಸುಮಾರು ೫ ಕೋಟಿ ಬಹುಮಾನವಿದ್ದರೂ ೨೦ ವರ್ಷಗಳವರೆಗೂ ಪೋಲೀಸರ ಕೈಗೆ ಸಿಕ್ಕದೆ ಹೋದನು. ಕೊನೆಗೆ ಅಕ್ಟೋಬರ್ ೧೮, ೨೦೦೪ ರಂದು ಪೋಲೀಸರ ಗುಂಡಿಗೆ ಬಲಿ ಯಾದನು.ಆಗ ತಮಿಳುನಾಡು ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಜಯಲಲಿತಾ. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದವರು ಎಸ್.ಎಂ.ಕೃಷ್ಣ. ಆ ದಿನ ಬೆಳಗ್ಗೆ ಬಾನುಲಿಯಲ್ಲಿ ಬಂದಿದ್ದ ಸುದ್ದಿ ಭಾರೀ ಕುತೂಹಲ ಮೂಡಿಸಿತ್ತು. ಜೀವನ ಕರ್ನಾಟಕದ ಗೋಪಿನಾಥಂನಲ್ಲಿ ವೀರಪ್ಪನ್ ಹುಟ್ಟಿದವನು. ೧೮ನೇ ವಯಸ್ಸಿಗೇ ಅಕ್ರಮ ಶಿಕಾರಿಗೆ, ಪ್ರಾಣಿ ಹತ್ಯೆಗೆ ತೊಡಗಿದನು. ತನ್ನ ವಿರೋಧಿ ಪಂಗಡಗಳನ್ನು ನಾಶ ಮಾಡಿದ ಇವನು ವರ್ಷಗಳು ಉರುಳಿದಂತೆ ಇಡೀ ಕಾಡಿನ ನಿಯಂತ್ರಣವನ್ನು ತನ್ನ ತೆಕ್ಕೆಗೆ ಪಡೆದುಕೊಂಡನು. ದಂತ ಹಾಗೂ ಶ್ರೀಗಂಧದ ಕಳ್ಳಸಾಗಾಣಿಕೆಯಿಂದ ದುಡ್ಡು ಮಾಡಿದನು. ೨,೦೦೦ಕ್ಕೂ ಹೆಚ್ಚು ಆನೆಗಳನ್ನು ಕೊಂದನೆಂದು ಹೇಳಲಾಗುತ್ತದೆಯಾದರೂ, ವೀರಪ್ಪನ್ ಬಗ್ಗೆ ಜೀವನ ಚರಿತ್ರೆಯನ್ನು ಬರೆದ ಸುನಾದ ರಘುರಾಮ್‌ರವರ ಪ್ರಕಾರ ೨೦೦ಕ್ಕೂ ಹೆಚ್ಚು ಆನೆಗಳನ್ನು ಕೊಂದಿರಲಾರ. ಕ್ರೂರಿಯ ಕಾಲಚಕ್ರ ೧೯೭೦ - ಕಳ್ಳಸಾಗಾಣಿಕೆದಾರರ ಗುಂಪೊಂದನ್ನು ಸೇರಿದನು. ೧೯೮೬ - ಬಂಧಿಸಿ ಬೂದಿಪಾಡ ಕಾಡಿನ ಗ್ಯೆಸ್ಟ್ ಹೌಸ್‌ನಲ್ಲಿ ಕೂಡಿ ಹಾಕಲಾಯಿತು. ಆದರೆ ನಿಗೂಡವಾಗಿ ಪರಾರಿಯಾದ. (ಲಂಚ ಕೊಟ್ಟು ಪರಾರಿಯಾದ ಎಂದು ಹೇಳಲಾಗುತ್ತದೆ) ೧೯೮೭ - ಫಾರೆಸ್ಟ್ ಆಫೀಸರ್ ಚಿದಂಬರಮ್ ಅವರನ್ನು ಅಪಹರಿಸಿ ಕೊಲೆಗೈದ. ತನ್ನ ವಿರೋಧಿ ಗುಂಪಿನ ೫ ಜನರನ್ನು ಕೊಲಗೈದ. ೧೯೮೯ - ಬೇಗೂರು ಅರಣ್ಯ ಪ್ರದೇಶದಲ್ಲಿ ೩ ಜನ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ಕೊಲೆಗೈದ. ೧೯೯೦ - ತನ್ನ ತಂಡದ ಇಬ್ಬರನ್ನು ಕೊಂದದ್ದಕ್ಕಾಗಿ ಸೇಡಿನಂತೆ ಇಬ್ಬರು ಪೋಲಿಸ್ ಸಿಬ್ಬಂದಿಯನ್ನು ಕೊಲೆಗೈದ. ಇನ್ನೂ ೪ ಕರ್ನಾಟಕದ ಪೋಲಿಸ್ ಅಧಿಕಾರಿಗಳನ್ನು ಕೊಲೆಗೈದ. ಕರ್ನಾಟಕ ರಾಜ್ಯವು ವೀರಪ್ಪನ್‌ನ ಹಿಡಿಯಲು ಸ್ಪೆಷಲ್ ಟ್ಯಾಸ್ಕ್ ಫೋರ್ಸ್ (ವಿಶೇಷ ಕಾರ್ಯಾಚರಣೆ ಪಡೆ) ಅನ್ನು ರಚಿಸಿತು. ಕರ್ನಾಟಕದ ಡೆಪ್ಯುಟಿ ಕನ್ಸರ್ವೇಟರ್ ಶ್ರೀನಿವಾಸ್ ಅವರನ್ನು ಗುಂಡಿಟ್ಟು ಕೊಂದು ತಲೆ ಕಡಿದು ಹಾಕಿದ (ತನ್ನ ತಂಗಿಯ ಆತ್ಮಹತ್ಯೆಗೆ ತೀರಿಸಿಕೊಂಡ ಸೇಡು ಇದಾಗಿತ್ತು). ೩ ವರ್ಷಗಳ ನಂತರ ಶ್ರೀನಿವಾಸ್‌ರವರ ತಲೆಯು ಪತ್ತೆಯಾಯಿತು. ೧೯೯೨ - ರಾಂಪುರದ ಪೋಲಿಸ್ ಸ್ಟೇಶನ್ ಮೇಲೆ ದಾಳಿ ನಡೆಸಿ ಐದು ಜನರನ್ನು ಪೋಲಿಸರನ್ನು ಕೊಲೆಗೈದು ಅಲ್ಲಿಂದ ಮದ್ದು, ಗುಂಡು ಮತ್ತು ಅಸ್ತ್ರಗಳನ್ನು ದೋಚಿದ. ಎಸ್ ಟಿ ಎಫ್ ಇದಕ್ಕೆ ಪ್ರತ್ಯುತ್ತರವಾಗಿ ವೀರಪ್ಪನ್ ತಂಡದ ೪ ಜನರನ್ನು ಗುಂಡಿಟ್ಟಿ ಕೊಂದಿತು. ಎಸ್ ಟಿ ಎಫ್ ಪೋಲಿಸ್ ಅಧಿಕಾರಿ ಹರಿಕೃಷ್ಣ ಹಾಗೂ ಷಕೀಲ್ ಅಹ್ಮದ್ ಮತ್ತು ೨೫ ಕಾನ್ಸ್ಟಬಲ್‌ಗಳನ್ನು ಸುಳ್ಳು ಮಾಹಿತಿದಾರನ ದೆಸೆಯಿಂದ ಸಿಕ್ಕಿಹಾಕಿಸಲು ಬಲೆ ಬೀಸಿದ. ಈ ತಂಡದ ಆರು ಜನರನ್ನು ಕೈ ಬಾಂಬುಗಳಿಂದ, ಗ್ರೆನೇಡ್‌ಗಳಿಂದ ಕೊಂದನು. ೧೯೯೩ - ಪೋಲಿಸರು ಹಾಗು ಸಾಮಾನ್ಯ ಜನರಿಂದ ಕೂಡಿದ ೨೨ ಪ್ರಯಾಣಿಕರಿದ್ದ ಬಸ್ಸನ್ನು ನೆಲ ಬಾಂಬಿನಿಂದ ಉಡಾಯಿಸಿದನು. ಎಸ್ ಪಿ ಗೋಪಾಲ್ ಹೊಸೂರ್‌ರ ವಿಶೇಷ ತಂಡದ ೬ ಪೋಲೀಸರನ್ನು ಕೊಂದನು. ತಮಿಳುನಾಡು ಸರಕಾರವು ಬಾರ್ಡರ್ ಸೆಕ್ಯೂರಿಟಿ ಫೋರ್ಸ್‌ಅನ್ನು ವೀರಪ್ಪನ್‌ನ ಹಿಡಿಯಲು ಗೊತ್ತು ಮಾಡಿತು. ಬಿಎಸ್‌ಎಫ್ ಹಾಗೂ ಎಸ್‌ಟಿಎಫ್‌ನ ಮಿಶ್ರ ಕಾರ್ಯಾಚರಣೆ ಪಡೆ ೧೯ ವೀರಪ್ಪನ್ ಸಹಚರರನ್ನು ಹಿಡಿದು ೬ ಜನರನ್ನು ಕೊಂದಿತು. ೩ ಜನ ಪೋಲಿಸರು ಹತರಾದರು. ವೀರಪ್ಪನ್ ಶರಣಾಗತನಾಗಲು ಹಲವು ಷರತ್ತುಗಳನ್ನು ಮುಂದಿಟ್ಟ. ಆದರೆ ಹುತಾತ್ಮರ ಸಂಬಂಧಿಕರು ವೀರಪ್ಪನ್‌ನ ಷರತ್ತಿನನುಗುಣವಾಗಿ ಸರಕಾರ ಯಾವುದೇ ಕ್ರಮ ತೆಗುದುಕೊಳ್ಳುವುದನ್ನು ವಿರೋಧಿಸಿದರು. ೧೯೯೬ - ಒಬ್ಬ ಪೋಲೀಸ್ ಮಾಹಿತಿಗಾರನನ್ನು ಕೊಂದನು. ಇನ್ನೂ ಹತ್ತು ಪೋಲೀಸ್ ಸಿಬ್ಬಂದಿಗಳನ್ನು ಕೊಂದನು. ಪೋಲೀಸ್ ಕಸ್ಟಡಿಯಲ್ಲಿ ತನ್ನ ತಮ್ಮ ಅರ್ಜುನನ್ ಆತ್ಮಹತ್ಯೆ ಮಾಡಿಕೊಂಡದ್ದಕ್ಕೆ ಸೇಡೆಂಬಂತೆ ಪೋಲಿಸ್ ಅಧಿಕಾರಿ ತಮಿಳ್ಸೆಲ್ವನ್‌ನ ಮೇಲೆ ದಾಳಿ ನಡೆಸಿ ಒಬ್ಬ ಕಾನ್ಸ್ಟಬಲ್‌ಅನ್ನು ಕೊಂದನು. ೧೯೯೭ - ತನ್ನ ಮಗುವನ್ನು ಕೊಂದನು. ೨೦೦೦ - ಡಾ. ರಾಜ್‌ಕುಮಾರ್ ಅವರನ್ನು ಅವರ ಗಾಜನೂರು ಮನೆಯಿಂದ ಅಪಹರಿಸಿ ೧೦೯ ದಿನಗಳ ಬಳಿಕ ಬಿಟ್ಟನು (ಹಣ ಪಡೆದ ಬಳಿಕ). ೨೦೦೨ - ಕರ್ನಾಟಕದ ಮಂತ್ರಿಯೋರ್ವರಾದ ನಾಗಪ್ಪರವರನ್ನು ಅಪಹರಿಸಿ ಕೊಂದನು. ೨೦೦೪ - ಕರ್ನಾಟಕ ಟ್ಯಾಸ್ಕ್ ಫೋರ್ಸ್‌ನಿಂದ ಸಾಯಿಸಲ್ಪಟ್ಟ. ನೋಡಿ ವೀರಪ್ಪನ್ (ಚಲನಚಿತ್ರ) ಹೊರಗಿನ ಸಂಪರ್ಕಗಳು "ವೀರಪ್ಪನ್, ೧೨೦ ಕೊಲೆಯ ಹಿಂದಿರುವ ನರಹಂತಕ": ಹಿಂದುಸ್ತಾನ್ ಟೈಮ್ಸ್. ವೀರಪ್ಪನ್ ಸಾವಿನ ಬಗ್ಗೆ ಬಿಬಿಸಿ ವರದಿ ಸಿಫಿ - ಕಾಲ ಚಕ್ರದ ಬಗ್ಗೆ ಮಾಹಿತಿ ಡಾ|| ರಾಜ್‌ಕುಮಾರ್ ಅಪಹರಣದ ವರದಿಗಳ ಆರ್ಕೈವ್ ಉಲ್ಲೇಖಗಳು "killing veerappan" the kannada movie ನರಹಂತಕರು ೧೯೫೨ ಜನನ ೨೦೦೪ ನಿಧನ
956
https://kn.wikipedia.org/wiki/%E0%B2%AA%E0%B3%8D%E0%B2%B0%E0%B2%9A%E0%B2%B2%E0%B2%BF%E0%B2%A4
ಪ್ರಚಲಿತ
ಕನ್ನಡಕ್ಕೆ ವಿಕಿಮೀಡಿಯಾದ ತ್ರೈಮಾಸಿಕ ಸುದ್ದಿ ಪತ್ರವನ್ನು ಅನುವಾದಿಸಲಾಗುತ್ತಿದೆ. ಅನುವಾದ ಮಾಡಲು ಉತ್ಸಾಹ ಇರುವವರು ಈ ಪುಟವನ್ನು ವೀಕ್ಷಿಸಿರಿ. ಕನ್ನಡ ವಿಕಿಪೀಡಿಯಾಕ್ಕೆ ನಿರ್ವಾಹಕರಾಗುವ ಬಗ್ಗೆ ಮನವಿ ಸಲ್ಲಿಸಲು ವಿಕಿಪೀಡಿಯ:ನಿರ್ವಾಹಕ ಮನವಿ ಪುಟವನ್ನು ನೋಡಿ. ಪ್ರಚಲಿತ ಸುದ್ದಿಗಳನ್ನು ಸಂಪಾದಿಸಲು ಉತ್ಸಾಹವಿರುವವರು ಈ ಪುಟದ ಚರ್ಚೆ ಕಾಲಂನಲ್ಲಿ ಸಂದೇಶ ಬಿಡಬಹುದು. ಆಯ್ದ ದಿನಗಳ, ಪ್ರಮುಖ ದಿನಗಳ ಪಟ್ಟಿಯನ್ನು ತಯಾರಿಸುತ್ತಿದ್ದೇವೆ. ಉತ್ಸಾಹ್ವಿರುವವರು ಇದರ ಮೇಲ್ವಿಚಾರಣೆವಹಿಸಿಕೊಳ್ಳಲು ಮುಂದೆ ಬರಬಹುದು. ವಿಕಿಪೀಡಿಯ ಪುಟಗಳು
958
https://kn.wikipedia.org/wiki/%E0%B2%9A%E0%B2%BE%E0%B2%B2%E0%B3%81%E0%B2%95%E0%B3%8D%E0%B2%AF
ಚಾಲುಕ್ಯ
ಚಾಲುಕ್ಯ ರಾಜವಂಶ ದಕ್ಷಿಣ ಭಾರತದಲ್ಲಿ ಕ್ರಿ.ಶ. ೫೫೦ ರಿಂದ ೭೫೦ ಮತ್ತು ಕ್ರಿ.ಶ. ೯೭೩ ರಿಂದ ೧೧೯೦ರ ವರೆಗೆ ಅಸ್ತಿತ್ವದಲ್ಲಿದ್ದ ರಾಜವಂಶ. ಬೆಳವಣಿಗೆ ಚಾಲುಕ್ಯ ವಂಶದ ಸ್ಥಾಪನೆ ಕ್ರಿ.ಶ. ೫೫೦ರಲ್ಲಿ ಮೊದಲನೆಯ ಪುಲಿಕೇಶಿಯಿಂದ ನಡೆಯಿತು.ಕೆಲವು ಇತಿಹಾಸಕಾರರ ಪ್ರಕಾರ ಚಾಲುಕ್ಯ ವಂಶದ ಪ್ರಥಮ ದೊರೆ ಜಯಸಿಂಹ ಎಂದೂ ಹೇಳಲಾಗುತ್ತದೆ. ಪುಲಿಕೇಶಿ ತನ್ನ ಆಡಳಿತಕ್ಕೆ ಆಗಿನ ಕಾಲದ ವಾತಾಪಿ (ಈಗ ಬಾದಾಮಿ, ಬಾಗಲಕೋಟೆ ಜಿಲ್ಲೆಯಲ್ಲಿದೆ) ನಗರವನ್ನು ರಾಜಧಾನಿಯಾಗಿ ಮಾಡಿದ. ಆತನ ಮಕ್ಕಳು ಚಾಲುಕ್ಯ ಸಾಮ್ರಾಜ್ಯವನ್ನು ಈಗಿನ ಕರ್ನಾಟಕ, ಮಹಾರಾಷ್ಟ್ರ , ಗೋವಾ, ಆಂಧ್ರಪ್ರದೇಶ, ತೆಲಂಗಾಣ ಅಲ್ಲದೆ ಮಧ್ಯಪ್ರದೇಶ, ಗುಜರಾತ್, ತಮಿಳುನಾಡು, ಕೇರಳದ ಕೆಲಭಾಗಗಳಿಗು ವಿಸ್ತರಿಸಿದರು. ಪುನರುತ್ಥಾನ ಮತ್ತು ಅವಸಾನ ಚಾಲುಕ್ಯ ಸಾಮ್ರಾಜ್ಯ ಮತ್ತೆ ಕ್ರಿ.ಶ. ೬೫೫ ರಲ್ಲಿ ಮೊದಲನೆಯ ವಿಕ್ರಮಾದಿತ್ಯನ ಮೂಲಕ ಮೇಲೆದ್ದಿತು. ಪಲ್ಲವರೊಂದಿಗಿನ ಸರಣಿ ಯುದ್ಧಗಳು ಕ್ರಿ.ಶ. ೭೪೦ ರಲ್ಲಿ ಚಾಲುಕ್ಯ ದೊರೆ ಎರಡನೇ ವಿಕ್ರಮಾದಿತ್ಯನ ವಿಜಯದೊಂದಿಗೆ ಕೊನೆಗೊಂಡವು. ಆದರೆ ಮತ್ತೆ ೭೫೦ ರಲ್ಲಿ ರಾಷ್ಟ್ರಕೂಟರ ಮೇಲೆ ಯುದ್ಧದಲ್ಲಿ ಸೋತ ನಂತರ ಆ ಕಾಲಕ್ಕೆ ಚಾಲುಕ್ಯ ಸಾಮ್ರಾಜ್ಯ ಪತನವಾಯಿತು. ೯೭೦ ರ ದಶಕದಲ್ಲಿ ಚಾಲುಕ್ಯರ ವಂಶಜರಲ್ಲಿ ಒಬ್ಬನಾದ ಎರಡನೇ ತೈಲಪ ರಾಷ್ಟ್ರಕೂಟರನ್ನು ಸೋಲಿಸಿ ಗುಜರಾತ್ ಪ್ರದೇಶವನ್ನು ಬಿಟ್ಟು ಚಾಲುಕ್ಯ ಸಾಮ್ರಾಜ್ಯದ ಉಳಿದ ಭಾಗಗಳನ್ನೆಲ್ಲ ಹಿಂದಕ್ಕೆ ಪಡೆದನು. ಈತನ ರಾಜಧಾನಿ ಕಲ್ಯಾಣಿ, ಮತ್ತು ಈ ಕಾಲದ ಚಾಲುಕ್ಯ ವಂಶಕ್ಕೆ ಕಲ್ಯಾಣಿ ಚಾಲುಕ್ಯರು ಎಂದೂ ಸಹ ಹೆಸರು. ಈ ಬಾರಿ ಚಾಲುಕ್ಯರು ನಡುನಡುವೆ ಚೋಳ ಸಾಮ್ರಾಜ್ಯದ ವಿರುದ್ಧ ಯುದ್ಧಗಳನ್ನು ನಡೆಸುತ್ತಿದ್ದರು. ಮೊದಲನೆಯ ಸೋಮೇಶ್ವರ ಎಂಬ ಚಾಲುಕ್ಯ ಅರಸು (ಈತನಿಗೆ ಆಹವಮಲ್ಲ ಎಂದೂ ಹೆಸರು) ರಾಜಾಧಿರಾಜ ಚೋಳ ನನ್ನು ಕ್ರಿ.ಶ. ೧೦೫೨ ರಲ್ಲಿ ಸೋಲಿಸಿದನು. ಚಾಲುಕ್ಯ ವಂಶದ ಮುಂದಿನ ಪ್ರಸಿದ್ಧ ಅರಸು ಆರನೇ ವಿಕ್ರಮಾದಿತ್ಯ (ಕ್ರಿ.ಶ ೧೦೭೬-೧೧೨೬, ವಿಕ್ರಮಾಂಕ ಎಂದೂ ಹೆಸರು). ವಿಕ್ರಮಾಂಕನ ಮರಣದ ನಂತರ ಚಾಲುಕ್ಯ ಸಾಮ್ರಾಜ್ಯ ಹೆಚ್ಚು ಕಾಲ ನಿಲ್ಲಲಿಲ್ಲ. ೧೧೯೦ ರಲ್ಲಿ ದ್ವಾರಸಮುದ್ರದ ಹೊಯ್ಸಳರು ಮತ್ತು ಯದುಗಿರಿಯ ಯಾದವರು ಚಾಲುಕ್ಯ ವಂಶವನ್ನು ಸೋಲಿಸಿದರು. ಐತಿಹ್ಯಗಳು ಕಲ್ಯಾಣದ ಚಾಲುಕ್ಯರ ರಾಜ ನಾಲ್ಕನೆಯ ವಿಕ್ರಮಾದಿತ್ಯನ ಆಸ್ಥಾನದಲ್ಲಿದ್ದ ಪ್ರಸಿದ್ಧ ಕವಿ ವಿದ್ಯಾಪತಿ ಬಿಲ್ಹಣ, ತನ್ನ ಕೃತಿ ವಿಕ್ರಮಾಂಕದೇವ ಚರಿತದಲ್ಲಿ, ಈ ಕಥೆಯನ್ನು ಹೇಳುತ್ತಾನೆ. ಇಂದ್ರ ಜಗತ್ತಿನಲ್ಲೆಲ್ಲಾ ಹೆಚ್ಚುತ್ತಿದ್ದ ಅಧರ್ಮವನ್ನು ಹತ್ತಿಕ್ಕಿ ,ದುರುಳರನ್ನು ಸದೆಬಡಿಯಲು ಸಮರ್ಥನಾದ ವೀರನೊಬ್ಬನ್ನು ಸೃಷ್ಟಿಸುವಂತೆ ಬ್ರಹ್ಮನನ್ನು ಬೇಡಿಕೊಂಡ. ಇದಕ್ಕೊಪ್ಪಿದ ಬ್ರಹ್ಮ ಸಂಧ್ಯಾವಂದನೆ ಮಾಡುವಾಗ ಅವನ ಬೊಗಸೆಯಿಂದ (ಚುಲುಕ??) ವೀರನೊಬ್ಬ ಹೊರಬಂದ. ಅವನೇ ಚಾಲುಕ್ಯವಂಶದ ಮೂಲಪುರುಷ. ಇದೇ ವಂಶದಲ್ಲಿ ಮುಂದೆ ಆಗಿಹೋದ ಹರಿತ ಮತ್ತು ಮಾನವ್ಯ ಎಂಬ ಮಹಾವೀರರು ವಂಶದ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿಸಿದರು.ವೆಂಗಿಯ ಚಾಲುಕ್ಯರ ವಿಮಲಾದಿತ್ಯನ ಉಂಬಳಿ ರಾಮಸ್ತಿಪುಂಡಿಯಲ್ಲಿಯೂ ಇದೇ ಐತಿಹ್ಯವನ್ನು ಪ್ರಸ್ತಾಪಿಸಿ, ವಿವರಿಸಲಾಗಿದೆ. ಇದೇ ಕಥೆಯ ಇನ್ನೊಂದು ಆವೃತ್ತಿ , ಆರನೆಯ ವಿಕ್ರಮಾದಿತ್ಯನ ಕಾಲದ ನಿಲಗುಂದ ದಾಖಲೆಯಲ್ಲಿದ್ದು, ಬಿಲ್ಹಣ ಇದನ್ನು ಪುನಃ ವಿವರಿಸುತ್ತಾನೆ. ಈ ಐತಿಹ್ಯದ ಪ್ರಕಾರ ಚಾಲುಕ್ಯರ ಪೂರ್ವಜರು ಅಯೋಧ್ಯೆಯವರೆಂದೂ, ಅಲ್ಲಿ ಐವತ್ತೊಂಭತ್ತು ತಲೆಮಾರು ರಾಜ್ಯವಾಳಿ, ನಂತರ ದಕ್ಷಿಣಾಪಥಕ್ಕೆ ಬಂದು ನೆಲೆಸಿ ಅಲ್ಲಿ ಹದಿನಾರು ತಲೆಮಾರು ರಾಜ್ಯಭಾರ ಮಾಡಿದರಂತೆ. ಅದರ ನಂತರ ಮರೆಯಾದ ಈ ಮನೆತನವನ್ನು ಪುನಃ ಮುಂದೆ ತಂದವನು ಜಯಸಿಂಹ. ಆರನೆಯ ವಿಕ್ರಮಾದಿತ್ಯನ ಹಂಡರಿಕೆ ಶಾಸನದ ಪ್ರಕಾರ , ಹರಿತಿಪಂಚಶಿಖಿ ಎಂಬ ಋಷಿಯು ಅರ್ಘ್ಯಪ್ರದಾನ ಮಾಡುತ್ತಿರುವಾಗ, ಅವನ ಬೊಗಸೆಯಿಂದ ಉತ್ಪತ್ತಿಯಾದವರು ಚಾಲುಕ್ಯರು. ಅಷ್ಟೇ ಅಲ್ಲ, ಚಾಲುಕ್ಯರು ತಮ್ಮನ್ನು ಸಪ್ತಮಾತೃಕೆಯರು ಸಲಹಿದರು ಎಂದೂ ಹೇಳಿಕೊಳ್ಳುತ್ತಾರೆ. ಚಾಲುಕ್ಯ ಇತಿಹಾಸದ ಮೂರು ಕಾಲಮಾನಗಳು ಚಾಲುಕ್ಯರು ದಕ್ಷಿಣ ಪ್ರಸ್ಥಭೂಮಿಯ ಪ್ರದೇಶವನ್ನು ೬೦೦ ವರ್ಷಗಳಷ್ಟು ದೀರ್ಘ ಕಾಲ ಆಳಿದರು. ಈ ಅವಧಿಯಲ್ಲಿ ಮೂರು, ಸ್ವತಂತ್ರ ಆದರೆ ನಿಕಟ ಸಂಬಂಧದ, ರಾಜ್ಯಗಳಾಗಿ ಮೆರೆದಿದ್ದವು. ಇವು ಬಾದಾಮಿಯ ಚಾಲುಕ್ಯರು, (ಕ್ರಿ.ಶ. ೬ - ೮ನೆಯ ಶತಮಾನ) ಮತ್ತು ಅವರದೇ ಸೋದರ ಸಾಮ್ರಾಜ್ಯಗಳಾದ ಕಲ್ಯಾಣಿಯ ( ಪಶ್ಚಿಮ) ಚಾಲುಕ್ಯರು ಮತ್ತು ವೆಂಗಿಯ (ಪೂರ್ವ) ಚಾಲುಕ್ಯರು ಬಾದಾಮಿಯ ಚಾಲುಕ್ಯರು ಚಾಲುಕ್ಯ ಸಾಮ್ರಾಜ್ಯವನ್ನು ಕಟ್ಟಿದವನು ಒಂದನೆಯ ಪುಲಿಕೇಶಿ (ಕ್ರಿ.ಶ. ೫೫೦). ವಾತಾಪಿ ( ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಈಗಿನ ಬಾದಾಮಿ) ಯನ್ನು ವಶಪಡಿಸಿಕೊಂಡು ಅದನ್ನು ತನ್ನ ರಾಜಧಾನಿಯನ್ನಾಗಿ ಮಾಡಿಕೊಂಡ. ಈ ಚಾಲುಕ್ಯರು ಮುಂದೆ ಬಾದಾಮಿಯ ಚಾಲುಕ್ಯರು ಎಂದು ಪ್ರಸಿದ್ಧರಾದರು. ಪುಲಿಕೇಶಿ ಹಾಗೂ ಆತನ ವಂಶಸ್ಥರು ಆಳಿದ ರಾಜ್ಯ ಇಂದಿನ ಸಂಪೂರ್ಣ ಕರ್ನಾಟಕ ರಾಜ್ಯ,ಮಹಾರಾಷ್ಟ್ರ,ಗೋವಾ ,ಮಧ್ಯಪ್ರದೇಶ ,ಗುಜರಾತ್ ಮತ್ತು ಆಂಧ್ರ ಪ್ರದೇಶದ ಬಹುತೇಕ ಭಾಗಗಳನ್ನೊಳಗೊಂಡಿತ್ತು. ಇಮ್ಮಡಿ ಪುಲಿಕೇಶಿ ಬಾದಾಮಿ ಚಾಲುಕ್ಯರ ಅತಿ ದೊಡ್ಡ ಚಕ್ರವರ್ತಿ ಎನ್ನಲು ಅಡ್ಡಿಯಿಲ್ಲ. ಒಂದನೆಯ ಪುಲಿಕೇಶಿ (ಕ್ರಿ.ಶ. ೫೪೩ – ೫೬೬ ) ಒಂದನೆಯ ಕೀರ್ತಿವರ್ಮ (ಕ್ರಿ.ಶ. ೫೬ ೬ – ೫೯೭ ) ಮಂಗಳೇಶ (ಕ್ರಿ.ಶ. ೫೯ ೭ – ೬ ೦೯ ) ಇಮ್ಮಡಿ ಪುಲಿಕೇಶಿ (ಕ್ರಿ.ಶ. ೬ ೦೯ – ೬ ೪೨ ) ಒಂದನೆಯ ವಿಕ್ರಮಾದಿತ್ಯ (ಕ್ರಿ.ಶ. ೬ ೫೫ – ೬ ೮೦ ) ವಿನಯಾದಿತ್ಯ (ಕ್ರಿ.ಶ. ೬ ೮೦ – ೬ ೯ ೬ ) ವಿಜಯಾದಿತ್ಯ (ಕ್ರಿ.ಶ. ೬ ೯ ೬ – ೭೩೩ ) ಎರಡನೆಯ ವಿಕ್ರಮಾದಿತ್ಯ (ಕ್ರಿ.ಶ. ೭೩೩ – ೭೪೬ ) ಎರಡನೆಯ ಕೀರ್ತಿವರ್ಮ (ಕ್ರಿ.ಶ. ೭೪೬ – ೭೫೩ ) ಕ್ರಿ.ಶ. ೭೫೩ರಲ್ಲಿ ರಾಷ್ಟ್ರಕೂಟರ ದಂತಿದುರ್ಗನು ಕೀರ್ತಿವರ್ಮನ್ನು ಸೋಲಿಸುವುದರೊಂದಿಗೆ ಈ ಚಾಲುಕ್ಯ ಸಾಮ್ರಾಜ್ಯಕ್ಕೆ ತೆರೆ ಬಿದ್ದಿತು. ಕಲ್ಯಾಣಿಯ ಚಾಲುಕ್ಯರು ರಾಷ್ಟ್ರಕೂಟರ ಕಾಲದಲ್ಲಿ ಹಿಮ್ಮೆಟ್ಟಿದ ಚಾಲುಕ್ಯ ಸಾಮ್ರಾಜ್ಯ ,ಎರಡನೆಯ ತೈಲಪನು ರಾಷ್ಟ್ರಕೂಟರ ಮೂರನೆಯ ಕೃಷ್ಣನನ್ನು ಪದಚ್ಯುತಮಾಡಿ , ಚಾಲುಕ್ಯ ರಾಜ್ಯದ ಬಹುತೇಕ ಪ್ರದೇಶಗಳನ್ನು ಮತ್ತೆ ಕೈವಶಮಾಡಿಕೊಳ್ಳುವುದರೊಂದಿಗೆ, ತನ್ನ ವೈಭವವನ್ನು ಮರಳಿ ಪಡೆಯಿತು. ಚಾಲುಕ್ಯರ ಈ ಶಾಖೆ ಕಲ್ಯಾಣಿಯ ( ಪಶ್ಚಿಮ) ಚಾಲುಕ್ಯರೆಂದು ಹೆಸರಾಯಿತು. ಮುಂದೆ ಸುಮಾರು ೨೫೦ ವರ್ಷ ಆಳಿದ ಈ ರಾಜವಂಶವು , ಚೋಳರೊಂದಿಗೂ , ವೆಂಗಿಯ ಚಾಲುಕ್ಯರೊಂದಿಗೂ ನಿರಂತರ ಹೋರಾಟದಲ್ಲಿ ತೊಡಗಿತ್ತು. ಸತ್ಯಾಶ್ರಯ (ಕ್ರಿ.ಶ. ೯ ೯ ೭-೧೦೦೮), ಒಂದನೆಯ ಸೋಮೇಶ್ವರ (ಕ್ರಿ.ಶ. ೧೦೪೨-೧೦೬ ೮) ಮತ್ತು ಆರನೆಯ ವಿಕ್ರಮಾದಿತ್ಯ (ಕ್ರಿ.ಶ. ೧೦೭೬ – ೧೧೨೬ ) ಈ ವಂಶದ ಕೆಲವು ಪ್ರಸಿದ್ಧ ರಾಜರುಗಳು. ಎರಡನೆಯ ತೈಲಪ (ಕ್ರಿ.ಶ. ೯ ೭೩-೯ ೯ ೭ ) ಸತ್ಯಾಶ್ರಯ (ಕ್ರಿ.ಶ. ೯ ೯ ೭-೧೦೦೮) ಐದನೆಯ ವಿಕ್ರಮಾದಿತ್ಯ (ಕ್ರಿ.ಶ. ೧೦೦೮-೧೦೧೫) ಎರಡನೆಯ ಜಯಸಿಂಹ (ಕ್ರಿ.ಶ. ೧೦೧೫-೧೦೪೨) ಒಂದನೆಯ ಸೋಮೇಶ್ವರ (ಕ್ರಿ.ಶ. ೧೦೪೨-೧೦೬ ೮) ಎರಡನೆಯ ಸೋಮೇಶ್ವರ (ಕ್ರಿ.ಶ. ೧೦೬ ೮-೧೦೭೬ ) ಆರನೆಯ ವಿಕ್ರಮಾದಿತ್ಯ (ಕ್ರಿ.ಶ. ೧೦೭೬ – ೧೧೨೬ ) ಮೂರನೆಯ ಸೋಮೇಶ್ವರ (ಕ್ರಿ.ಶ. ೧೧೨೬ – ೧೧೩೮) ಎರಡನೆಯ ಜಗದೇಕಮಲ್ಲ (ಕ್ರಿ.ಶ. ೧೧೩೮ – ೧೧೫೧ ) ಮೂರನೆಯ ತೈಲಪ (ಕ್ರಿ.ಶ. ೧೧೫೧ – ೧೧೬ ೪ ) ಮೂರನೆಯ ಜಗದೇಕಮಲ್ಲ (ಕ್ರಿ.ಶ. ೧೧೬ ೩ – ೧೧೮೩) ನಾಲ್ಕನೆಯ ಸೋಮೇಶ್ವರ (ಕ್ರಿ.ಶ. ೧೧೮೪ – ೧೨೦೦) ಹೊಯ್ಸಳರು, ಕಾಕತೀಯರು ಮತ್ತು ಯಾದವರು ಈ ರಾಜಮನೆತನಗಳ ಉತ್ಕರ್ಷದೊಂದಿಗೆ ,೧೧೮೦ರಲ್ಲಿ, ಕಲ್ಯಾಣಿಯ ಚಾಲುಕ್ಯರ ಸಾಮ್ರಾಜ್ಯವು ಅಸ್ತಂಗತವಾಯಿತು. ವೆಂಗಿಯ (ಪೂರ್ವ) ಚಾಲುಕ್ಯರು ಇಂದಿನ ಆಂಧ್ರ ಪ್ರದೇಶದ ಕರಾವಳಿಯ ಭಾಗವಾಗಿದ್ದ , ವಿಷ್ಣುಕುಂಡಿನ ಸಾಮ್ರಾಜ್ಯದ ಅಳಿದುಳಿದ ಭಾಗಗಳನ್ನು ಸೋಲಿಸಿ, ಇಮ್ಮಡಿ ಪುಲಿಕೇಶಿಯು , ಅಲ್ಲಿಗೆ ತನ್ನ ತಮ್ಮ ಕುಬ್ಜ ವಿಷ್ಣುವರ್ಧನನನ್ನು ರಾಜಪ್ರತಿನಿಧಿಯಾಗಿ ನೇಮಿಸಿದನು. ಪುಲಿಕೇಶಿಯ ಮರಣದ ನಂತರ , ಈ ಶಾಖೆಯು ಸ್ವತಂತ್ರವಾಗಿ, ಮುಖ್ಯ ವಾತಾಪಿ ಸಾಮ್ರಾಜ್ಯಕ್ಕಿಂತ ಮುಂದೆ ,ಅನೇಕ ಪೀಳಿಗೆಗಳವರೆಗೆ ಸ್ವತಂತ್ರ ರಾಜ್ಯಭಾರ ಮಾಡಿತು. ಈ ರಾಜರು ೯ ನೆಯ ಶತಮಾನದ ಮಧ್ಯದವರೆಗೂ , ವೆಂಗಿ ಪ್ರಾಂತ್ಯದಲ್ಲಿ ಕನ್ನಡಕ್ಕೆ ಪ್ರೋತ್ಸಾಹ ಕೊಟ್ಟರು. ಅಲ್ಲಿಂದ ಮುಂದಿನ ಶಾಸನಗಳಲ್ಲಿ ಕ್ರಮೇಣ ಕನ್ನಡಲಿಪಿಯಲ್ಲಿ ಬರೆದ ತೆಲುಗು ಭಾಷೆ ಕಾಣಬರುತ್ತದೆ. ಕುಬ್ಜ ವಿಷ್ಣುವರ್ಧನ (ಕ್ರಿ.ಶ. ೬೨೪ – ೬೪೧ ) ಒಂದನೆಯ ಜಯಸಿಂಹ (ಕ್ರಿ.ಶ. ೬೪೧-೬೭೩) ಇಂದ್ರ ಭಟ್ಟಾರಕ (ಕ್ರಿ.ಶ. ೬೭೩) ಎರಡನೆಯ ವಿಷ್ಣುವರ್ಧನ (ಕ್ರಿ.ಶ.೬೭೩-೬೮೨) ಮಂಗಿ ಯುವರಾಜ (ಕ್ರಿ.ಶ.೬೮೨ – ೭೦೬ ) ಎರಡನೆಯ ಜಯಸಿಂಹ (ಕ್ರಿ.ಶ.೭೦೬ -೭೧೮) ಮೂರನೆಯ ವಿಷ್ಣುವರ್ಧನ (ಕ್ರಿ.ಶ.೭೧೯ -೭೫೫) ಒಂದನೆಯ ವಿಜಯಾದಿತ್ಯ (ಕ್ರಿ.ಶ.೭೫೫ – ೭೭೨) ನಾಲ್ಕನೆಯ ವಿಷ್ಣುವರ್ಧನ (ಕ್ರಿ.ಶ.೭೭೨ – ೮೦೮) ಎರಡನೆಯ ವಿಜಯಾದಿತ್ಯ (ಕ್ರಿ.ಶ.೮೦೮ – ೮೪೭) ಐದನೆಯ ವಿಷ್ಣುವರ್ಧನ (ಕ್ರಿ.ಶ.೮೪೭ – ೮೪೯) ಮೂರನೆಯ ವಿಜಯಾದಿತ್ಯ (ಕ್ರಿ.ಶ.೮೪೮ – ೮೯೨) ಒಂದನೆಯ ಭೀಮ (ಕ್ರಿ.ಶ. ೮೯ ೨-೯೨೧) ನಾಲ್ಕನೆಯ ವಿಜಯಾದಿತ್ಯ (ಕ್ರಿ.ಶ.೯೨೧) ಒಂದನೆಯ ಅಮ್ಮ (ಕ್ರಿ.ಶ.೯೨೧ – ೯೨೭) ಎರಡನೆಯ ವಿಕ್ರಮಾದಿತ್ಯ (ಕ್ರಿ.ಶ.೯೨೭ – ೯೨೮ .) ಎರಡನೆಯ ಯುದ್ಧಮಲ್ಲ (ಕ್ರಿ.ಶ.೯೨೮ – ೯೩೫ .) ಎರಡನೆಯ ಚಾಲುಕ್ಯ ಭೀಮ (ಕ್ರಿ.ಶ.೯೩೫ – ೯೪೭ .) ಎರಡನೆಯ ಅಮ್ಮ (ಕ್ರಿ.ಶ.೯೪೭ – ೯೭೦ .) ದಾನಮವ (ಕ್ರಿ.ಶ.೯೭೦ – ೯೭೩ .) ಜಟ ಚೋಡ ಭೀಮ (ಕ್ರಿ.ಶ.೯೭೩ - ೧೦೦೦). ಒಂದನೆಯ ಶಕ್ತಿವರ್ಮ (ಕ್ರಿ.ಶ.೧೦೦೦ - ೧೦೧೧ . ವಿಮಲಾದಿತ್ಯ (ಕ್ರಿ.ಶ.೧೦೧೧ – ೧೦೧೮ ) ರಾಜರಾಜ ನರೇಂದ್ರ (ಕ್ರಿ.ಶ.೧೦೧೮ – ೧೦೬೧) ಎರಡನೆಯ ಶಕ್ತಿವರ್ಮ ಏಳನೆಯ ವಿಜಯಾದಿತ್ಯ (ಕ್ರಿ.ಶ.೧೦೬೩ – ೧೦೬೮. , ೧೦೭೨ – ೧೦೭೫ .) ಲಾಟ ಚಾಲುಕ್ಯರು ಸೋಲಂಕಿಗಳು (ಪಶ್ಚಿಮ ) ಚಾಲುಕ್ಯರು ಚಾಲುಕ್ಯರ ಮೂಲ ಚಾಲುಕ್ಯರ ಮೂಲದ ಬಗ್ಯೆ ಅನೇಕ ಅಭಿಪ್ರಾಯಗಳಿದ್ದರೂ ಅವರು ಕರ್ನಾಟಕದವರು ಎಂಬ ಬಗ್ಯೆ ಸಾಕಷ್ಟು ಒಮ್ಮತವಿದೆ. ಚಾಲುಕ್ಯರ ಶಾಸನಗಳ ಭಾಷೆ ಕನ್ನಡ ಮತ್ತು ಸಂಸ್ಕೃತ. ಕೆಲವು ಚಾಲುಕ್ಯ ದೊರೆಗಳ ಹೆಸರು ಅಂತ್ಯವಾಗುವುದು ‘ಅರಸ’ ಎಂಬ ಕನ್ನಡ ಶಬ್ದದಿಂದ. ರಾಷ್ಟ್ರಕೂಟರ ಶಾಸನಗಳಲ್ಲಿ ಬಾದಾಮಿಯ ಚಾಲುಕ್ಯರನ್ನು ‘ಕರ್ನಾಟಕ ಬಲ’ ಎಂದು ಸಂಭೋದಿಸಲಾಗಿದೆ. ಅವರ ಪ್ರಕಾರ, ಚಾಲುಕ್ಯರು, ಬನವಾಸಿಯ ಕದಂಬರ ಪೀಳಿಗೆಯವರೋ ಅಥವಾ ಸಂಬಂಧಿಕರೋ ಆಗಿದ್ದರು. ಬನವಾಸಿಯ ಕದಂಬರ ಅಧೀನದಲ್ಲಿದ್ದ ಪ್ರದೇಶಗಳು ಮುಂದೆ ಚಾಲುಕ್ಯರ ವಶವಾದವು. ಮಂಗಳೇಶನ ಪ್ರಸಿದ್ಧ ಬಾದಾಮಿ ಗುಹಾ ಶಾಸನಗಳು ( ಕ್ರಿ.ಶ ೫೭೮) , ಅವನದೇ ಆದ ಮಹಾಕೂಟದ ಕಂಬದ ಮೇಲಿನ ಬರವಣಿಗೆ (ಕ್ರಿ.ಶ ೬೦೨) ಮತ್ತು ಕ್ರಿ.ಶ ೭೦೦ರ ಕಪ್ಪೆ ಅರಭಟ್ಟನ ಕನ್ನಡದಲ್ಲಿಯ ದಾಖಲೆಗಳು ಚಾಲುಕ್ಯರ ಭಾಷೆಯ ಬಗ್ಗೆ ಬೆಳಕು ಚೆಲ್ಲುತ್ತವೆ. ಬಾದಾಮಿ ಕೋಡಿನ ಒಂದನೆಯ ಪುಲಿಕೇಶಿಯ ಕ್ರಿ.ಶ ೫೪೩ರ ಮೊಟ್ಟಮೊದಲ ಶಾಸನ ಮತ್ತು ಎರಡನೆಯ ಪುಲಿಕೇಶಿಯ ಐಹೊಳೆಯ ಶಾಸನ (ಕ್ರಿ.ಶ ೬೩೪) ಕನ್ನಡಲಿಪಿಯಲ್ಲಿರುವ ಸಂಸ್ಕೃತ ಶಾಸನಗಳ ಉದಾಹರಣೆಗಳಾಗಿವೆ. ಐಹೊಳೆಯ ಶಾಸನ ಪುಲಿಕೇಶಿಯನ್ನು ೯೯,೦೦೦ ಗ್ರಾಮಗಳ ಮೂರು ಮಹಾರಾಷ್ಟ್ರಗಳ ಅಧಿಪತಿ ಎಂದು ವರ್ಣಿಸುತ್ತದೆ. ಪುಲಿಕೇಶಿ ಆ ಮೂರು ಮಹಾರಾಷ್ಟ್ರಗಳ ಅಧಿಪತಿ ಆಗಿದ್ದು ಉತ್ತರ ಭಾರತದ ಅರಸ ಹರ್ಷವರ್ಧನನ್ನು ಸೋಲಿಸಿದ ನಂತರ. ಬಾದಾಮಿ ಚಾಲುಕ್ಯರ ಕೊಡುಗೆಗಳು ವಾಸ್ತುಶಿಲ್ಪ ಮತ್ತು ಕಲೆ ಚಾಲುಕ್ಯ ಸಾಮ್ರಾಜ್ಯದ ಶಾಶ್ವತ ಕೊಡುಗೆಗಳು. ಪಟ್ಟದಕಲ್ಲು (|UNESCO heritage site), ಬಾದಾಮಿ,ಐಹೊಳೆಗಳಲ್ಲಿನ ಬಂಡೆಗಳಲ್ಲಿ ಕಡೆದ ದೇವಾಲಯಗಳು, ಅಜಂತಾ, ಎಲ್ಲೋರಾಗಳಲ್ಲಿನ ಸುಪ್ರಸಿದ್ಧ ಶಿಲ್ಪಕೃತಿಗಳು ಮತ್ತು ಭಿತ್ತಿಚಿತ್ರಗಳು ಚಾಲುಕ್ಯರ ಕಲಾಭಿರುಚಿಗೆ ಸಾಕ್ಷಿಯಾಗಿವೆ. ಈ ಕಾಲವನ್ನು ಚಾಲುಕ್ಯ ಶೈಲಿಯ ವಾಸ್ತುಶಿಲ್ಪದ ಆರಂಭಕಾಲವನ್ನಾಗಿ ಪರಿಗಣಿಸಲಾಗಿದೆ. ಕ್ರಿ.ಶ. ೪೫೦ - ೭೫೦ ರ ನಡುವೆ ಬರಿಯ ಐಹೊಳೆ ಒಂದರಲ್ಲಿಯೇ ನೂರೈವತ್ತಕ್ಕೂ ಹೆಚ್ಚು ದೇವಾಲಯಗಳನ್ನು ಬಾದಾಮಿ ಚಾಲುಕ್ಯರು ಕಟ್ಟಿಸಿದರು. ಈ ಆರಂಭ ಕಾಲದ ಕಲೆಯ ಉದಾಹರಣೆಯಾಗಿ ಐಹೊಳೆಯ ದುರ್ಗಾ (ಕ್ರಿ.ಶ.೬ ನೆಯ ಶತಮಾನ),ಲಾಡ್ ಖಾನ್ (ಕ್ರಿ.ಶ. ೪೫೦),ಮೇಗುತಿ (ಕ್ರಿ.ಶ.೬೩೪),ಹುಚ್ಚಿಮಲ್ಲಿ ಮತ್ತು ಹುಚ್ಚಪ್ಪಯ್ಯ (ಕ್ರಿ.ಶ. ೫ನೆಯ ಶತಮಾನ) ದೇವಾಲಯಗಳು, ಬಾದಾಮಿಯ ಗುಹಾ ದೇವಾಲಯಗಳನ್ನು ನೋಡಬಹುದು.ಪಟ್ಟದಕಲ್ಲಿನ ಅದ್ಭುತ ದೇವಾಲಯಗಳನ್ನು ಕಟ್ಟಿಸಿದವನು ಎರಡನೆಯ ವಿಕ್ರಮಾದಿತ್ಯ. (ಕ್ರಿ.ಶ.೭೪೦) ಇಲ್ಲಿನ ವಿರೂಪಾಕ್ಷ,ಮಲ್ಲಿಕಾರ್ಜುನ,ಸಂಗಮೇಶ್ವರ ಮತ್ತು ಒಂದು ಜೈನ ದೇವಾಲಯ ದ್ರಾವಿಡ ಶೈಲಿಯಲ್ಲಿದ್ದರೆ, ಜಂಬುಲಿಂಗ,ಕಾಶಿವಿಶ್ವೇಶ್ವರ ಮತ್ತು ಗಳಗನಾಥ ದೇವಾಲಯಗಳು ಉತ್ತರ ಭಾರತೀಯ ನಾಗರ ಶೈಲಿಯಲ್ಲಿವೆ.ಪಾಪನಾಥ ದೇವಾಲಯದಲ್ಲಿ ದಕ್ಷಿಣ ಮತ್ತು ಉತ್ತರದ ಶೈಲಿಗಳ ಸಮ್ಮಿಶ್ರಣದ ಪ್ರಯತ್ನ ಕಾಣುತ್ತದೆ. ಕಲ್ಯಾಣಿ ಚಾಲುಕ್ಯರ ಕಾಲದ ಕಲೆ ಮತ್ತು ಸಾಹಿತ್ಯ ಕನ್ನಡ ಸಾಹಿತ್ಯ ರನ್ನನಂತಹ ಶ್ರೇಷ್ಠ ಕನ್ನಡ ಕವಿಗಳಿಗೆ ಕಲ್ಯಾಣಿಯ ಚಾಲುಕ್ಯರು ಆಶ್ರಯ ಮತ್ತು ಪ್ರೋತ್ಸಾಹ ಕೊಟ್ಟರು. ರನ್ನನು ಎರಡನೆಯ ತೈಲಪನ ಮತ್ತು ಸತ್ಯಾಶ್ರಯನ ಆಸ್ಥಾನಕವಿಯಾಗಿದ್ದು, ಕಲ್ಯಾಣಿಯ ಚಾಲುಕ್ಯರ ಕಾಲದ ಮೊದಲ ಕವಿ. ಅಜಿತಪುರಾಣ, ಸಾಹಸಭೀಮವಿಜಯ ಅಥವಾ ಗದಾಯುದ್ಧ, ಪರಶುರಾಮಚರಿತ ಮತ್ತು ರನ್ನಕಂದ ಇವನ ಪ್ರಸಿದ್ಧ ಕೃತಿಗಳು.. ಆ ಕಾಲದಲ್ಲಿ ಇನ್ನೂ ಅನೇಕ ಕನ್ನಡ ವಿದ್ವಾಂಸರು ಆಗಿಹೋದರು. ಅವರಲ್ಲಿ ಕೆಲವರು, ಶೃಂಗಾರಶಾಸ್ತ್ರದ ಬಗೆಗಿನ ಮದನತಿಲಕ ಎಂಬ ಕೃತಿ ರಚಿಸಿದ ಚಂದ್ರರಾಜ, ಜಾತಕತಿಲಕ ( ಜ್ಯೋತಿಶ್ಶಾಸ್ತ್ರ) ಬರೆದ ಶ್ರೀಧರಾಚಾರ್ಯ, ಗೋವೈದ್ಯ ( ಪಶುವೈದ್ಯ ಶಾಸ್ತ್ರ) ಬರೆದ ಕೀರ್ತಿವರ್ಮ, ನಯಸೇನ (ಧರ್ಮಾಮೃತ), ನಾಗವರ್ಮ(ಕಾವ್ಯಾವಲೋಕನ) , ಬ್ರಹ್ಮಶಿವ (ಸಮಯಪರೀಕ್ಷೆ) , ರಾಜಾದಿತ್ಯ (ಕ್ಷೇತ್ರ ಗಣಿತ,ವ್ಯವಹಾರ ಗಣಿತ, ಲೀಲಾವತಿ) , ಜಗದ್ದಾಲ ಸೋಮನಾಥ (ಕರ್ನಾಟಕ ಕಲ್ಯಾಣಕಾರಕ - ಔಷಧಗಳ ಬಗ್ಯೆ). ವಚನಗಳನ್ನು ಬರೆದು ಪ್ರಸಿದ್ಧನಾದ ದೇವರ ದಾಸಿಮಯ್ಯನೂ ಈ ಕಾಲದವನೇ. ಅಷ್ಟೇ ಏಕೆ, ಮಂತ್ರಿಯಾಗಿದ್ದ ದುರ್ಗಸಿಂಹ (ಪಂಚತಂತ್ರ) ಹಾಗೂ ದಂಡನಾಯಕ ಎರಡನೆಯ ಚಾವುಂಡರಾಯ (ಲೋಕೋಪಕಾರ) ಸಹ ಸಾಹಿತ್ಯ ಕೃತಿಗಳನ್ನು ರಚಿಸಿದರು. ಇದು ಕನ್ನಡ ಸಾಹಿತ್ಯದ ಸುವರ್ಣ ಕಾಲವಾಗಿತ್ತು. ಸಂಸ್ಕೃತ ಸಾಹಿತ್ಯ ಕಲ್ಯಾಣಿಯ ಚಾಲುಕ್ಯರು ವಾದಿರಾಜ ( ಯಶೋಧರ ಚರಿತಮ್, ಪಾರ್ಶ್ವನಾಥ ಚರಿತಮ್)ರಂತಹ ಸಂಸ್ಕೃತ ವಿದ್ವಾಂಸರಿಗೆ ಪ್ರೋತ್ಸಾಹ ಕೊಟ್ಟರು. ತನಗೆ ಆಶ್ರಯ ಕೊಟ್ಟ ಆರನೆಯ ವಿಕ್ರಮಾದಿತ್ಯನನ್ನು ಬಿಲ್ಹಣನು ವಿಕ್ರಮಾಂಕದೇವ ಚರಿತೆಯ ಮೂಲಕ ಅಜರಾಮರವಾಗಿಸಿದ್ದಾನೆ. ಸುಪ್ರಸಿದ್ಧ ಮಿತಾಕ್ಷರ ಸಂಹಿತೆ ಬರೆದವನು ವಿಜ್ಞಾನೇಶ್ವರ(ಮರತೂರು). ಸ್ವತಃ ಮೂರನೆಯ ಸೋಮೇಶ್ವರನೇ ಕಲೆ ಮತ್ತು ವಿಜ್ಞಾನದ ಬಗೆಗೆ ವಿಶ್ವಕೋಶವನ್ನು ರಚಿಸಿದನು. ಜಗದೇಕಮಲ್ಲನು ಸಂಗೀತಚೂಡಾಮಣಿಯನ್ನು ರಚಿಸಿದನು. ವಾಸ್ತು ಶಿಲ್ಪ ಬಳ್ಳಾರಿ, ಧಾರವಾಡ ಮತ್ತು ಹೈದರಾಬಾದ್ ಕರ್ನಾಟಕದ ಪ್ರದೇಶಗಳಲ್ಲಿ ಕಂಡುಬರುವ ಉತ್ತರಾರ್ಧ ಚಾಲುಕ್ಯ ಶೈಲಿಯ ಕಟ್ಟಡಗಳು ಚಾಲುಕ್ಯರ ಪೂರ್ವಾರ್ಧದ ಶೈಲಿಗೂ, ಹೊಯ್ಸಳರ ಶೈಲಿಗೂ ಮಧ್ಯದ ಕೊಂಡಿಯಾಗಿವೆ. ದಕ್ಷಿಣದಲ್ಲಿ ನೂರಾರು, ಅದರಲ್ಲಿ ಅರ್ಧಕ್ಕೂ ಹೆಚ್ಚು ಕರ್ನಾಟಕದಲ್ಲಿ, ಕಟ್ಟಲ್ಪಟ್ಟ ದೇವಾಲಯಗಳೊಂದಿಗೆ ೧೨ನೆಯ ಶತಮಾನದಲ್ಲಿ ಕಲ್ಯಾಣಿ ಶೈಲಿಯ ವಾಸ್ತುಶಿಲ್ಪ ತನ್ನ ಉತ್ತುಂಗ ಸ್ಥಿತಿಯನ್ನು ಮುಟ್ಟಿತು. ಕಲ್ಯಾಣಿಯ ಚಾಲುಕ್ಯರ ವಾಸ್ತುಶಿಲ್ಪದ ಮತ್ತೊಂದು ವೈಶಿಷ್ಟ್ಯವೆಂದರೆ , ಬಹು ಮಜಲಿನ ಸೋಪಾನಗಳ ಪುಷ್ಕರಣಿಗಳು. ಗದಗ ಜಿಲ್ಲೆಯ ಲಕ್ಕುಂಡಿಯ ಕಾಶಿವಿಶ್ವೇಶ್ವರ, ದಾವಣಗೆರೆ ಜಿಲ್ಲೆಯ ಕುರುವತ್ತಿಯ ಮಲ್ಲಿಕಾರ್ಜುನ ಮತ್ತು ಕೊಪ್ಪಳ ಜಿಲ್ಲೆಯ ಮಹಾದೇವ ದೇವಾಲಯಗಳು ಚಾಲುಕ್ಯರ ಉತ್ತರಾರ್ಧ ವಾಸ್ತುಶಿಲ್ಪ ಶೈಲಿಯ ಉತ್ಕೃಷ್ಟ ಉದಾಹರಣೆಗಳಾಗಿವೆ. ಅದರಲ್ಲಿಯೂ ಮಹಾದೇವ ದೇವಾಲಯವು , ತನ್ನ ಬೃಹದಾಕಾರ ಮತ್ತು ಸೂಕ್ಷ್ಮ ವಿವರಗಳಿಂದ , ಭಾರತದ ಅತ್ಯುತ್ತಮ ಉದಾಹರಣೆಗಳಲ್ಲಿ ಒಂದು ಎಂದು ಹೇಳಲಾಗಿದೆ.ಗೋಡೆಯ, ಕಂಬದ ಹಾಗೂ ಗೋಪುರಗಳ ಮೇಲಿನ ಕೆತ್ತನೆಗಳು ಚಾಲುಕ್ಯರ ಅತ್ಯುನ್ನತ ಮಟ್ಟದ ಕಲಾಭಿರುಚಿ ಹಾಗೂ ಸಂಸ್ಕೃತಿಗೆ ಸಾಕ್ಷಿಯಾಗಿವೆ. ಅಲ್ಲಿಯ ಕ್ರಿ.ಶ. ೧೧೧೨ರ ಶಾಸನವೊಂದು ಆ ದೇವಾಲಯವನ್ನು ಆರನೆಯ ವಿಕ್ರಮಾದಿತ್ಯನ ದಂಡನಾಯಕ ಮಹದೇವನು ಕಟ್ಟಿಸುತ್ತಿದ್ದಾನೆಂದು ವಿವರಿಸಿ, ಅದು ದೇವಾಲಯಗಳಲ್ಲೇ ಚಕ್ರವರ್ತಿ ಎಂದು ಬಣ್ಣಿಸುತ್ತದೆ. ಹೊಯ್ಸಳರ ರಾಜರು ಪ್ರಸಿದ್ಧ ಶಿಲ್ಪಿ ಅಮರಶಿಲ್ಪಿ ಜಕಣಾಚಾರಿಗೆ ಬೇಲೂರಿನಲ್ಲಿನ ಸುಪ್ರಸಿದ್ಧ ದೇವಾಲಯ ಕಟ್ಟಲು ಹೇಳಿದಾಗ, ಆತ ಮಹಾದೇವ ದೇವಾಲಯಕ್ಕೆ ದರ್ಶನವಿತ್ತು ಪ್ರೇರಣೆ ಪಡೆದುಕೊಂಡ ಎಂದು ಒಂದು ಐತಿಹ್ಯವಿದೆ. ಕಲ್ಯಾಣಿಯ ಚಾಲುಕ್ಯರ ವಾಸ್ತುಶಿಲ್ಪವು ಸೂಕ್ಷ್ಮ ಕುಸುರಿ ಕೆಲಸದ ಕಂಬಗಳು , ಮತ್ತು ಪುಷ್ಕರಣಿ (ಕಲ್ಯಾಣಿ)ಗೆ ಒತ್ತು ಕೊಟ್ಟಿದೆ. ಕಲ್ಯಾಣಿಯ ಚಾಲುಕ್ಯರು ಕರ್ನಾಟಕದ ಧಾರವಾಡ, ಗದಗ ಮತ್ತು ಹಾವೇರಿ ಪ್ರದೇಶಗಳಲ್ಲಿ ಐವತ್ತಕ್ಕೂ ಹೆಚ್ಚು ದೇವಾಲಯಗಳನ್ನು ಕಟ್ಟಿದರು. ಬಾದಾಮಿ, ಐಹೊಳೆಗಳಲ್ಲಿಯೂ, ದೇವಾಲಯ ನಿರ್ಮಾಣದ ಎರಡನೆಯ ಹಂತದ ಕಾರ್ಯದಲ್ಲಿ , ಮಲ್ಲಿಕಾರ್ಜುನ ಮತ್ತು ಯಲ್ಲಮ್ಮ ಮೊದಲಾದ ಅನೇಕ ದೇವಾಲಯಗಳನ್ನು ನಿರ್ಮಿಸಿದರು. ಗದಗ ವಾಸ್ತುಶಿಲ್ಪ ಶೈಲಿ ಎಂದೇ ಹೆಸರಾದ ಹೊಸ ಶೈಲಿಯೊಂದು ಈ ಕಾಲದಲ್ಲಿ ಅಭಿವೃದ್ಧಿಯಾಯಿತು. ಇದು ದಕ್ಷಿಣ ( ದ್ರಾವಿಡ) ಮತ್ತು ಉತ್ತರ ( ನಾಗರ) ಶೈಲಿಯ ಸಮ್ಮಿಶ್ರಣವಾಗಿದ್ದು ವೇಸರ ಶೈಲಿಯದಾಗಿದೆ ಎನ್ನಲಾಗುತ್ತದೆ. ಡಾ. ಜ್ಯೋತ್ಸ್ನಾ ಕಾಮತರು ಹೇಳುತ್ತಾರೆ “ ಕರ್ನಾಟಕದ ಇತಿಹಾಸದಲ್ಲಿ , ಚಾಲುಕ್ಯರ ಕಾಲವನ್ನು ಸುವರ್ಣ ಯುಗವೆಂದು ಪರಿಗಣಿಸಲಾಗಿದೆ. ರಾಜ್ಯವಿಸ್ತಾರ ಅಷ್ಟೇ ಅಲ್ಲದೆ, ಈ ಕಾಲವು ದಕ್ಷ ಆಡಳಿತ ಕ್ರಮ, ಸಾಮಾಜಿಕ ಸುರಕ್ಷತೆ, ವಿದ್ಯಾಪ್ರಸಾರ , ಇತರ ಸಾಂಸ್ಕೃತಿಕ ಚಟುವಟಿಕೆಗಳು, ವ್ಯಾಪಾರ , ವಾಣಿಜ್ಯಗಳಲ್ಲಿ ವಿಕಾಸ , ಸಾಹಿತ್ಯ, ಕಲೆಮತ್ತು ವಾಸ್ತುಶಿಲ್ಪಗಳಲ್ಲಿ ಅಭಿವೃದ್ಧಿ ಇವುಗಳನ್ನೂ ಪ್ರತಿನಿಧಿಸುತ್ತದೆ. ಈ ಕಾಲವು ಸಾಮಾಜಿಕ ಸುಧಾರಣೆಗಳಿಗೂ ಇಂಬು ಕೊಟ್ಟು ಬಸವೇಶ್ವರರಂತಹ ವಿಶಿಷ್ಟ ಸುಧಾರಕರಿಂದ ವೀರಶೈವಪಂಥದ ಹುಟ್ಟಿಗೂ ಕಾರಣವಾಯಿತು" ಪ್ರತಿ ವರ್ಷ ಕರ್ನಾಟಕ ಸರ್ಕಾರವು ಪಟ್ಟದಕಲ್ಲು , ಬಾದಾಮಿ,ಐಹೊಳೆಗಳಲ್ಲಿ ಮೂರು ದಿನಗಳ ಚಾಲುಕ್ಯ ಉತ್ಸವ ಎಂಬ ಸಂಗೀತ, ನೃತ್ಯ ಕಾರ್ಯಕ್ರಮವನ್ನು ನಡೆಸುತ್ತದೆ. ಅರವತ್ತರ ದಶಕದಲ್ಲಿ ತಯಾರಾದ ಇಮ್ಮಡಿ ಪುಲಿಕೇಶಿ ಚಲನಚಿತ್ರವು ಆ ಮಹಾನ್ ರಾಜನ ಜೀವನ ,ಸಾಧನೆಗಳನ್ನು ಕೊಂಡಾಡುತ್ತದೆ. ಇವನ್ನೂ ನೋಡಿ ಇಮ್ಮಡಿ ಪುಲಿಕೇಶಿ ರಾಷ್ಟ್ರಕೂಟ, ಹೊಯ್ಸಳರು ಬಾದಾಮಿ, ಐಹೊಳೆ, ಪಟ್ಟದಕಲ್ಲು ರನ್ನ, ನಯಸೇನ, ನಾಗವರ್ಮ ಬಾಹ್ಯ ಸಂಪರ್ಕಗಳು ಚಾಲುಕ್ಯರ ಕಲೆ ಕಲ್ಯಾಣಿ ಚಾಲುಕ್ಯರು ಚಾಲುಕ್ಯ ವಂಶ ಭಾರತದ ಇತಿಹಾಸ ಕರ್ನಾಟಕದ ಇತಿಹಾಸ ja:後期チャールキヤ朝
960
https://kn.wikipedia.org/wiki/%E0%B2%9A%E0%B2%95%E0%B3%8D%E0%B2%B0%E0%B2%B5%E0%B2%B0%E0%B3%8D%E0%B2%A4%E0%B2%BF
ಚಕ್ರವರ್ತಿ
ಚಕ್ರವರ್ತಿ ಎಂದರೆ ಸಾರ್ವಭೌಮ, ಸಾಮ್ರಾಟ. ಒಂದು ರಾಜ್ಯದ ಅಧಿಪತಿ ರಾಜನೆನಿಸಿಕೊಂಡರೆ, ಅಂತಹ ರಾಜರುಗಳಿಗೆ ಅಧಿಪತಿಯಾದ ರಾಜಾಧಿರಾಜನಿಗೆ ಚಕ್ರವರ್ತಿ ಎಂದು ಕರೆಯಲಾಗುತ್ತಿತ್ತು. ಚಕ್ರವರ್ತಿ ಎನ್ನುವುದು ಪ್ರಾಚೀನ ಕಾಲದ ರಾಜರನ್ನುದ್ದೇಶಿಸಿ ಕೊಡುತ್ತಿದ್ದ ಬಿರುದು. ಬಹಳವಾಗಿ ದಂಡಯಾತ್ರೆಗಳಲ್ಲಿ ಯಶಸ್ವಿಯಾಗಿ ಹಲವು ಪ್ರಾಂತ್ಯಗಳನ್ನು ಗೆದ್ದು, ಏಕಚಕ್ರಾಧಿಪತ್ಯಕ್ಕೆ ಒಳಪಡಿಸುತ್ತಿದ್ದ, ಒಟ್ಟುಗೂಡಿಸುತ್ತಿದ್ದ ರಾಜರಿಗೆ ಸಾಮಾನ್ಯವಾಗಿ ಚಕ್ರವರ್ತಿ ಎಂದು ಹೆಸರಿಸಿ ಕರೆಯುವುದುಂಟು.ಚತ್ರವತಿಗಳನ್ನು ರಾಜರುಗಳಿಗಿಂತ ಹಿಚ್ಚಿನ ಘನತೆ ಮತ್ತು ಉನ್ನತ ದರ್ಜಿಯಲ್ಲಿ ಗುರುತುಪಡಿಸಲಾಗುತ್ತದೆ. ಮಧ್ಯ ಶತಮಾನದಲ್ಲಿ ಇರೋಪಿನಲ್ಲಿ ಚಕ್ರವತಿಗಳನ್ನು ಪೋಪ್‌ಗಳಿಗೆ ಹೋಲಿಸಲಾಗಿತ್ತು. ನಾಮಪದಗಳು ಸರ್ಕಾರ ರಾಜಕೀಯ
964
https://kn.wikipedia.org/wiki/%E0%B2%95%E0%B3%81%E0%B2%AE%E0%B2%BE%E0%B2%B0%E0%B2%B5%E0%B3%8D%E0%B2%AF%E0%B2%BE%E0%B2%B8
ಕುಮಾರವ್ಯಾಸ
ಕುಮಾರವ್ಯಾಸ (ಕ್ರಿ.ಶ. ೧೩೫೦-೧೪೦೦) ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಾಯಣಪ್ಪ. "ಗದುಗಿನ ನಾರಾಯಣಪ್ಪ" ಎಂದು ಸಾಮಾನ್ಯವಾಗಿ ಕುಮಾರವ್ಯಾಸನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ ಇದೆ. ಕುಮಾರವ್ಯಾಸನ ಕಾಲ ಕುಮಾರವ್ಯಾಸನ ಕಾಲದ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಲೇ ಇವೆ. ಆದರೂ ಕವಿಚರಿತಾಕಾರರು ಕೆಲವು ಸಾಹಿತ್ಯದ ಹಿನ್ನೆಲೆಯಿಂದ ಕುಮಾರವ್ಯಾಸನ ಕಾಲವನ್ನು ನಿರ್ಣಯಿಸಲು ಪ್ರಯತ್ನಿಸಿದ್ದಾರೆ. ಕುಮಾರವ್ಯಾಸನ ಹೆಸರು ಹೇಳುವ ಉತ್ತರಕಾಲೀನ ಕವಿಗಳಲ್ಲಿ ಮೊದಲಿಗ ತಿಮ್ಮಣ್ಣಕವಿ. ಇವನ ಕಾಲ ಸುಮಾರು ಕ್ರಿ.ಶ. ೧೫೧೦. ಇವನು ವಿಜಯನಗರದ ಶ್ರೀಕೃಷ್ಣದೇವರಾಯ ನ(ಕ್ರಿ.ಶ.೧೫೦೯ ರಿಂದ ೧೫೨೯ರವರೆಗೆ) ಆಜ್ಞಾನುಸಾರ 'ಕೃಷ್ಣರಾಜ ಭಾರತ'ಎಂಬ ಕೃತಿಯನ್ನು ರಚಿಸಿದ್ದಾನೆ. ಸುಮಾರು ಕ್ರಿ.ಶ. ೧೫೦೦ ರಲ್ಲಿದ್ದ 'ತೊರವೆ ರಾಮಾಯಣ' ಬರೆದ ಕುಮಾರ ವಾಲ್ಮೀಕಿ ಅಥವಾ ತೊರವೆ ನರಹರಿ ಮತ್ತು 'ಕೃಷ್ಣರಾಯ ಭಾರತ' ಬರೆದ ತಿಮ್ಮಣ್ಣ ಕವಿ ಕುಮಾರವ್ಯಾಸನನ್ನು ಹೊಗಳಿರುವುದರಿಂದ ಕುಮಾರವ್ಯಾಸನು ಆ ಕಾಲಕ್ಕಿಂತ ಹಿಂದಿನವನೆಂದು ಸಿದ್ಧವಾಗಿದೆ. ಜೀವಂಧರ ಚರಿತೆ ಬರೆದ ಕ್ರಿ.ಶ. ೧೪೨೪ ರಲ್ಲಿದ್ದ ಭಾಸ್ಕರ ಕವಿಯು ಕುಮಾರವ್ಯಾಸನ ಅನೇಕ ನುಡಿಕಟ್ಟುಗಳನ್ನು ಬಳಸಿ ಅವನಿಂದ ಪ್ರಭಾವಿತನಾಗಿರುವುದರಿಂದ, ಕುಮಾರವ್ಯಾಸನು ಅವನಿಗಿಂತ ಹಿಂದಿನವನೆಂದು ಸಂಶೋಧಕರು ನಿರ್ಧರಿಸಿದ್ದಾರೆ. ಕುಮಾರವ್ಯಾಸನ ಹೆಸರಿರುವ ಒಂದು ಶಾಸನ ಗದುಗಿನ ವೀರನಾರಾಯಣ ದೇವಸ್ಥಾನಕ್ಕೆ ಸೇರಿದ ಬಾವಿಯ ಎಡಮಗ್ಗುಲ ಗೋಡೆಯ ಮೇಲಿದೆ. ಇದರ ಕಾಲ ಸುಮಾರು ಕ್ರಿ.ಶ. ೨೬-೮-೧೫೩೯ ರಲ್ಲಿ ಬರೆದ ಶಾಸನದಲ್ಲಿ ಕವಿ ಕುಮಾರವ್ಯಾಸಂಗೆ ಪ್ರಸನ್ನನಾದ ಗದುಗಿನ ವೀರ ನಾರಾಯಣನ ಸನ್ನಿಧಿಯಲ್ಲಿ. ಎಂದು ಕುಮಾರವ್ಯಾಸನ ಹೆಸರನ್ನು ಉಲ್ಲೇಖಿಸಿರುವುದರಿಂದ ಅವನು ಅದಕ್ಕಿಂತ ಹಿಂದಿನವನೆಂದು ಸ್ಪಷ್ಟವಾಗಿದೆ. ಕುಮಾರವ್ಯಾಸ ಶ್ರೀಕೃಷ್ಣದೇವರಾಯನ ಆಳ್ವಿಕೆಯಲ್ಲಿದ್ದವನೆಂದೂ, ಪ್ರಭುಲಿಂಗಲೀಲೆ ಬರೆದ ಚಾಮರಸನ ತಂಗಿಯ ಗಂಡನೆಂದೂ, ಇದರ ಪ್ರಕಾರ ಇವನ ಕಾಲ ಸುಮಾರು ೧೪೩೯ ಆಗುತ್ತದೆಂದು ಕವಿಚರಿತಾಕಾರರು ಅಭಿಪ್ರಾಯ ಪಟ್ಟಿದ್ದಾರೆ. ಆದ್ದರಿಂದ ಅವನ-ಕುಮಾರವ್ಯಾಸನ ಕಾಲವನ್ನು ಕ್ರಿ.ಶ. ೧೩೫೦-೧೪೦೦ ಎಂದು ನಿರ್ಣಯಿಸಿರುತ್ತಾರೆ. (ಡಾ.ಟಿ.ವಿ.ವೆಂಕಟಾಚಲಶಾಸ್ತ್ರಿ : ಕುಮಾರವ್ಯಾಸ ಭಾರತ ಸಂಗ್ರಹ ಪ್ರ : ಬಿ.ಎಂ.ಶ್ರೀ. ಪ್ರತಿಷ್ಠಾನ). ಕುಮಾರವ್ಯಾಸನು 'ಕರ್ಣಾಟ ಭಾರತ ಕಥಾಮಂಜರಿ' ರಚಿಸಿ, ವ್ಯಾಸರಾಯರಿಗೆ ತೋರಿಸಿದನೆಂಬ ಐತಿಹ್ಯವಿದೆಯೆಂದು ತಿಳಿಸಿರುವ ಪಂಚಮುಖಿ ಎಂಬ ವಿದ್ವಾಂಸರು- "ಹರಿ ಶರಣರೆನ್ನ ಮನೆಯ ಮೆಟ್ಟಲು ಮನೆ ಪರಮಪಾವನವಾಯಿತು" ಎಂಬ ಸುಳಾದಿಯಲ್ಲಿ ಪುರಂದರದಾಸರು ತಮ್ಮ ಮನೆಗೆ ಕುಮಾರವ್ಯಾಸ ಬಂದುದನ್ನು, ಆತ ತನ್ನ ಕೃತಿಗೆ ಶ್ರೀಕೃಷ್ಣನೇ ಕಥಾನಾಯಕನೆಂದು ಶಾಸ್ತ್ರ ಸಮ್ಮತವಾಗಿ ಹೇಳಿದನೆನ್ನಲಾಗಿದೆ. ಈ ದಿಸೆಯಲ್ಲಿ ಕುಮಾರವ್ಯಾಸ ಅತಿ ಪ್ರಾಚೀನನೂ ಅಲ್ಲ, ಅರ್ವಾಚೀನನೂ ಅಲ್ಲ. ಮಧ್ಯಕಾಲದವನೆಂದೂ, ಅವನ ಭಾಷಾಶೈಲಿಯ ದೃಷ್ಠಿಯಿಂದ ನಿರ್ವಿವಾದವಾಗಿ ಹೇಳಬಹುದು. ಕುಮಾರವ್ಯಾಸನ ಊರು ಹುಟ್ಟೂರು ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡವೆಂಬ ಗ್ರಾಮವೆಂದೂ ಅವನ ವಂಶಸ್ಥರು ಈಗಲೂ ಅಲ್ಲಿ ವಾಸಿಸುತ್ತಾರೆಂದೂ ಹೇಳಲಾಗಿದೆ. ಈ ಬಗ್ಗೆ ಸಂಶೋಧನೆ ಮಾಡಿದ ಶ್ರೀ ಎ.ವಿ.ಪ್ರಸನ್ನ, ಕೆ.ಎ.ಎಸ್. ಅವರು ಅವರ ಮನೆಗೆ ಹೋಗಿ ವಿಚಾರ ವಿನಿಮಯ ಮಾಡಿ ಅವರಲ್ಲಿರುವ ಕಾಗದ ಪತ್ರಗಳನ್ನೂ ಕುಮಾರವ್ಯಾಸ ಭಾರತದ ಓಲೆಗರಿ ಪ್ರತಿಗಳನ್ನೂ ಪರಿಶೀಲಿಸಿರುವುದಾಗಿ ತಿಳಿಸಿದ್ದಾರೆ. ಈ ಎಲ್ಲಾ ಪತ್ರಗಳ ಆಧಾರದ ಮೇಲೆ ಕವಿಯ ವಂಶಸ್ಥರು ತಮ್ಮ ವಂಶದ ಚರಿತ್ರೆಯನ್ನು ಈ ರೀತಿ ತಿಳಿಸುತ್ತಾರೆ. ಕುಮಾರವ್ಯಾಸನ ಪೂರ್ವಿಕರಾದ ಚಿನ್ನದ ಕೈ ಮಾಧವರಸಯ್ಯನು ಹಿರೇಹಂದಿಗೋಳ ಗ್ರಾಮದವನಾಗಿದ್ದು ಕೋಳೀವಾಡ ಗ್ರಾಮವನ್ನು ಕ್ರಯಕ್ಕೆ ಪಡೆದು, ಕೋಳೀವಾಡದಲ್ಲಿಯೇ ನೆಲಸಿದ. ಅವರು ಅದ್ವೈತಿಗಳಾಗಿದ್ದು ಹರಿ-ಹರರಲ್ಲಿ ಅಬೇಧವನ್ನು ಕಾಣುವವರು. ಇವರು ಅಗಸ್ತ್ಯ ಗೋತ್ರಕ್ಕೆ ಸೇರಿದವರು. ಈ ಬಗ್ಗೆ ಗದುಗಿನ ಕುಮಾರವ್ಯಾಸ ಸಂಘದ ಅಧ್ಯಕ್ಷರೂ ಆದ ಶ್ರೀ ಎಂ.ಎಚ್ ಹರಿದಾಸ ಅವರು ರಚಿಸಿರುವ ಮಹಾಕವಿ ಕುಮಾರವ್ಯಾಸ (ಪ್ರ.ವಿಕ್ರಮ ಪ್ರಕಾಶನ ಗದಗ) ಕಿರು ಹೊತ್ತಿಗೆಯಲ್ಲಿ ಹೆಚ್ಚಿನ ವಿಷಯವಿದೆ. ಅವನ ವಂಶಸ್ಥರಾದ ದತ್ತಾತ್ರೇಯ ಪಾಟೀಲರು ಶ್ರೀ ಎ.ವಿ.ಪ್ರಸನ್ನ ಅವರಿಗೆ ಕೊಟ್ಟ ಕುಮಾರವ್ಯಾಸನ ವಂಶಾವಳಿಯನ್ನು ಗಮಕ ಸಂಪದ ಪತ್ರಿಕೆಯಲ್ಲಿ ಪ್ರಕಟಿಸಿದ್ದಾರೆ. ಒಟ್ಟಿನಲ್ಲಿ ಕವಿ ನಾರಾಯಣಪ್ಪ ಕೋಳಿವಾಡದ ಶಾನುಭೋಗ. ಗದುಗಿನ ವೀರನಾರಾಯಣ ಇವನ ಆರಾಧ್ಯದೈವ. ಇವನಿಗೆ ವೇದವ್ಯಾಸ ಮತ್ತು ಅಶ್ವತ್ಥಾಮರ ಅನುಗ್ರಹವಾಗಿತ್ತೆಂದು ಹೇಳಲಾಗುತ್ತದೆ. ವಂಶಾವಳಿ ಈ ವಂಶಾವಳಿಯಂತೆ, ವೀರನಾರಾಯಣರೆಂಬ ಹೆಸರಿನವರು ಐದು ಜನ ಬರುತ್ತಾರೆ. ಅದರಲ್ಲಿ ವಂಶ ಪ್ರವರ್ತಕ ಚಿನ್ನದ ಕೈ ಮಾಧವರಸಯ್ಯನ ನಂತರ ನಾಲ್ಕನೆಯವನಿಗೆ ೧ ನೇ ವೀರನಾರಾಯಣ ಗೌಡ ಎಂದಿದೆ. ಅವನೇ ಕುಮಾರವ್ಯಾಸನೆಂದು ನಿರ್ಧರಿಸಿದ್ದಾರೆ. ಇಲ್ಲಿ ಗೌಡ ಎಂಬ ಪದ ಜಾತಿ ಸೂಚಕವಲ್ಲ. ಅದು ಗ್ರಾಮವೃದ್ಧ > ಗಾಮುಂಡ > ಗೌಡ ಎಂದು ನಿರ್ಣಯಿಸಿದ್ದಾರೆ. ಆನಂತರ ಕೆಲವು ಅದೇ ಮನೆತನದವರು ಅಯ್ಯ, ಪಾಟೀಲ ಎಂದು ತಮ್ಮ ಹೆಸರಿನ ಕೊನೆಗೆ ಸೇರಿಸಿ ಕೊಂಡಿದ್ದಾರೆ. ವಂಶ ಪ್ರವರ್ತಕ ಚಿನ್ನದ ಕೈ ಮಾಧವರಸಯ್ಯನ ಕಾಲ ಕ್ರಿ.ಶ. ೧೧೪೮. ಇವನ ನಂತರದ ನಾಲ್ಕನೆಯ ತಲೆಮಾರಿನವ ಕುಮಾರವ್ಯಾಸ. ಪ್ರತಿ ತಲೆಮಾರಿಗೆ ೨೫ ವರ್ಷವೆಂದು ಹಿಡಿದರೆ, ಕುಮಾರವ್ಯಾಸನ ಕಾಲ ಕ್ರಿ.ಶ. ೧೨೪೮ . ಅವನು ಸುಮಾರು ೭೦ ವರ್ಷ ಬದುಕಿದ್ದನೆಂದು ಭಾವಿಸಿದರೂ ಕ್ರಿ.ಶ. ೧೨೪೮ ರಿಂದ ೧೩೧೮ ಎಂದರೆ ೩೦-೪೦ ವರ್ಷ ವ್ಯತ್ಯಾಸ ಬರುತ್ತದೆ. ವಂಶಾವಳಿ : ||ಶ್ರೀ ವೀರನಾರಾಯಣ ಪ್ರಸನ್ನಃ|| ೧.ವಂಶ ಪ್ರವರ್ತಕ ಚಿನ್ನದ ಕೈ ಮಾಧವರಸಯ್ಯ. ೨.ತಿರುಮಲಯ್ಯ. ೩. ಲಕ್ಕರಸಯ್ಯ. ೪.ವೀರನಾರಾಯಣ ಗೌಡ.; ಕೃಷ್ಣರಸಯ್ಯ ; ತಂಕರಸಯ್ಯ ; ತಿರುಮಲಯ್ಯ. ಅಶ್ಯತ್ಥಯ್ಯ ? ೪-೧ ನೇ ವೀರನಾರಾಯಣ ನೇ ಕುಮಾರವ್ಯಾಸ ನಂತರ ೧೯೪೧ ಕ್ಕೆ ೧೯ ತಲೆಮಾರಿನ ಪಟ್ಟಿ ಇದೆ. ಕೃತಿಗಳು ಕುಮಾರವ್ಯಾಸನ ಅತಿ ಪ್ರಸಿದ್ಧ ಕೃತಿ ಕರ್ಣಾಟ ಭಾರತ ಕಥಾಮಂಜರಿ. ಇದಕ್ಕೆ ಗದುಗಿನ ಭಾರತ, ಕನ್ನಡ ಭಾರತ, ಕುಮಾರವ್ಯಾಸ ಭಾರತ ಎಂದೂ ಹೆಸರು. ಮಹಾಕವಿ ವ್ಯಾಸರ ಸಂಸ್ಕೃತ ಮಹಾಭಾರತದ ಕನ್ನಡಾನುವಾದ ಎನ್ನಬಹುದು. ಆದರೆ ಕೇವಲ ಅನುವಾದವಾಗಿ ಉಳಿಸದೆ ಕುಮಾರವ್ಯಾಸ ತನ್ನ ಕಾವ್ಯಸಾಮರ್ಥ್ಯವನ್ನು ಈ ಕೃತಿಯಲ್ಲಿ ಸಂಪೂರ್ಣವಾಗಿ ಧಾರೆಯೆರೆದಿದ್ದಾನೆ. ಕನ್ನಡ ಸಾಹಿತ್ಯದಲ್ಲಿ ಮೇರುಕೃತಿಯಾಗಿ ಪರಿಗಣಿತವಾಗಿರುವ ಕನ್ನಡ ಭಾರತ, ಸಂಸ್ಕೃತ ಮಹಾಭಾರತದ ಮೊದಲ ಹತ್ತು ಪರ್ವಗಳು, ೧೪೭ ಸಂಧಿ, ೭೯೭೧ ಪದ್ಯಗಳನ್ನು ಒಳಗೊಂಡಿದೆ. (ತಿದ್ದುಪಡಿ:೧೫೨ ಸಂಧಿಗಳು, 8244ಪದ್ಯಗಳು) 'ಕುಮಾರವ್ಯಾಸ ಭಾರತ'ದ ಭಾಷೆ ನಡುಗನ್ನಡ. (ಕುಮಾರವ್ಯಾಸ ಭಾರತ-ಆದಿಪರ್ವ) ಸಂಪೂರ್ಣ ಕಾವ್ಯ ಭಾಮಿನೀ ಷಟ್ಪದಿ ಛಂದಸ್ಸಿನಲ್ಲಿ ರಚಿತವಾಗಿದ್ದು ಕುಮಾರವ್ಯಾಸನ ಕಾವ್ಯ ಪ್ರತಿಭೆ ಓದುಗರನ್ನು ದಂಗುಬಡಿಸುತ್ತದೆ. ಅವನ ಕಾವ್ಯಪ್ರತಿಭೆ ಪೂರ್ಣಶಕ್ತಿಯಲ್ಲಿ ಹೊರಹೊಮ್ಮುವುದು ಅವನ ರೂಪಕಗಳಲ್ಲಿ. ಕುಮಾರವ್ಯಾಸನ ರೂಪಕಗಳ ವೈವಿಧ್ಯತೆ ಮತ್ತು ಆಳ ಅಪಾರವಾದದ್ದು. ಇದೇ ಕಾರಣಕ್ಕಾಗಿ ಕುಮಾರವ್ಯಾಸನ ಹೆಸರು ರೂಪಕ ಸಾಮ್ರಾಜ್ಯ ಚಕ್ರವರ್ತಿ ಎಂದೇ ಖ್ಯಾತಿ ಪಡೆದಿದೆ. ಉದಾಹರಣೆಗೆ ಪರಿಶೀಲಿಸಿ: "ಬವರವಾದರೆ ಹರನ ವದನಕೆ ಬೆವರ ತಹೆನು" (ಅಭಿಮನ್ಯುವಿನ ವೀರೋಕ್ತಿ!) "ನರಶರದ ಜುಂಜುವೊಳೆಯಲಿ ಜಾರುವನೆ ಜಾಹ್ನವೀಧರ" (ಕಿರಾತಾರ್ಜುನೀಯ ಪ್ರಸಂಗದಲ್ಲಿ) "ಜವನ ಮೀಸೆಯ ಮುರಿದನೋ" (ಉತ್ತರನ ಪೌರುಷದಲ್ಲಿ) "ಅರಿವಿನ ಸೆರಗು ಹಾರಿತು" ರೂಪಕಗಳೊಂದಿಗೆ ಕುಮಾರವ್ಯಾಸನ ಇನ್ನೊಂದು ಸಾಮರ್ಥ್ಯ ಮಾನವಪ್ರಕೃತಿಯ ವರ್ಣನೆ. ಕುಮಾರವ್ಯಾಸನ ಪಾತ್ರಗಳು ಕಣ್ಣಿಗೆ ಕಟ್ಟುವಷ್ಟು ಸ್ಪಷ್ಟ. ಅವನ ಎಲ್ಲ ಪಾತ್ರಗಳು ಅವರವರದೇ ರೀತಿಯಲ್ಲಿ ಮಾತನಾಡುತ್ತಾರೆ, ಬೈಯುತ್ತಾರೆ, ನಗುತ್ತಾರೆ, ಹಾಗೂ ಅಳುತ್ತಾರೆ ಸಹ. ಕುಮಾರವ್ಯಾಸ ಅಷ್ಟೇ ಆಳವಾದ ದೈವಭಕ್ತ ಸಹ. ಶ್ರೀ ಕೃಷ್ಣನ ವರ್ಣನೆ ಅವನ ಕಾವ್ಯರಚನೆಯ ಮೂಲೋದ್ದೇಶಗಳಲ್ಲಿ ಒಂದು. ("ತಿಳಿಯ ಹೇಳುವೆ ಕೃ‍ಷ್ಣ ಕಥೆಯನು") ಅವನ ಮಹಾಭಾರತ ಕಥೆ ಕೃಷ್ಣನ ಸುತ್ತಲೂ ಸುತ್ತುತ್ತದೆ. ಕುಮಾರವ್ಯಾಸ ಕೃಷ್ಣನ ಭಕ್ತ. ಮಹಾಭಾರತದ ಹದಿನೆಂಟು ಪರ್ವಗಳಲ್ಲಿ ಹತ್ತರ (ಗದಾಪರ್ವ) ವರೆಗೆ. ಬರೆದು ದುರ್ಯೋಧನನ ಅವಸಾನದ ನಂತರ, ಕುಮಾರವ್ಯಾಸನು ಮುಂದೆ ಸಂಕ್ಷಿಪ್ತವಾಗಿ, ಶ್ರೀಕೃಷ್ಣನು ಧರ್ಮರಾಜನಿಗೆ ಪಟ್ಟಾಭಿಷೇಕವನ್ನು ಮಾಡಿಸಿ ದ್ವಾರಕೆಗೆ ಹಿಂದಿರುಗುವವರೆಗೆ ಬರೆದಿದ್ದಾನೆ; ಕುಮಾರವ್ಯಾಸನ ಪ್ರತಿಭೆಗೆ ಕನ್ನಡಿಯಾಗಿ ಹಿಡಿದ ಕುವೆಂಪು ರವರ ಸಾಲುಗಳನ್ನು ನೋಡಿ:"ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!" ಕುಮಾರವ್ಯಾಸನ ಇನ್ನೊಂದು ಕೃತಿ ಐರಾವತ. ಇದು ಅಷ್ಟಾಗಿ ಪ್ರಸಿದ್ಧವಾಗಿಲ್ಲ. ಪ್ರಭಾವ ಕುಮಾರವ್ಯಾಸ ಕನ್ನಡ ಸಾಹಿತ್ಯದ ಬೆಳವಣಿಗೆಯ ಮೇಲೆ ಬಹಳಷ್ಟು ಪ್ರಭಾವ ಬೀರಿದ್ದಾನೆ. ಕುಮಾರವ್ಯಾಸ ಭಾರತವನ್ನು ಇಂದಿಗೂ ಸಹ ಕರ್ನಾಟಕದಲ್ಲಿ ಓದಲಾಗುತ್ತದೆ, ವ್ಯಾಖ್ಯಾನ ಮಾಡಲಾಗುತ್ತದೆ. ಕುಮಾರವ್ಯಾಸ ಭಾರತವನ್ನು ಓದುವ ಒಂದು ವಿಶಿಷ್ಟ ಶೈಲಿಯಾದ ಗಮಕ ಕಲೆ ಸಾಕಷ್ಟು ಪ್ರಸಿದ್ಧವಾಗಿದೆ."ಹಲಗೆ ಬಳಪವ ಪಿಡಿಯದೊಂದಗ್ಗಳಿಕೆ ಪದವಿಟ್ಟಳುಪದೊಂದಗ್ಗಳಿಕೆ ಪರರೊಡ್ಡವದ ರೀತಿಯ ಕೊಳ್ಳದಗ್ಗಳಿಕೆಬಳಸಿ ಬರೆಯಲು ಕಂಠಪತ್ರದವುಲಹುಗೆಡದಗ್ಗಳಿಕೆಯೆಂಬೀಬಲುಹು ವೀರನಾರಾಯಣನ ಕಿಂಕರಗೆ""ವೀರನಾರಾಯಣನೆ ಕವಿ ಲಿಪಿಕಾರ ಕುಮಾರವ್ಯಾಸ ಕೇಳುವಸೂರಿಗಳು ಸನಕಾದಿಗಳು ಜಂಗಮ ಜನಾರ್ಧನರುಚಾರು ಕವಿತೆಯ ಬಳಕೆಯಲ್ಲ ವಿಚಾರಿಸುವಡಳವಲ್ಲ ಚಿತ್ತವಧಾರು ಹೋ ಸರ್ವಜ್ಞರಾದರು ಸಲುಗೆ ಬಿನ್ನಪವ" ಕುಮಾರವ್ಯಾಸನು ತನ್ನ ಕಾವ್ಯದಲ್ಲಿ ಕೆಲವು ಒಗಟು ಪದ್ಯಗಳನ್ನು ಬಳಸಿದ್ದಾನೆ. ಅವಕ್ಕೆ ಮಂಡಿಗೆಗಳೆಂದು(೧) ಕರೆಯುತ್ತಾರೆ ಅವು ವ್ಯಾಖ್ಯಾನ ಮಾಡುವವರಿಲ್ಲದಿದ್ದರೆ ಅರ್ಥವಾಗುವುದು ಕಷ್ಟ. ಇವನ್ನೂ ನೋಡಿ ಕುಮಾರವ್ಯಾಸಭಾರತ-ಸಟೀಕಾ ಕುಮಾರವ್ಯಾಸ ಭಾರತ-ಆದಿಪರ್ವ-ಪೀಠಿಕಾ ಸಂಧಿ ಕರ್ಣಾಟ ಭಾರತ ಕಥಾಮಂಜರಿ ಚರ್ಚೆಪುಟ:ಕುಮಾರವ್ಯಾಸ ಕನ್ನಡ ಸಾಹಿತ್ಯ ಕುಮಾರವ್ಯಾಸನ ಮಂಡಿಗೆಗಳು ಆಧಾರ ಶ್ರೀಎ.ವಿ. ಪ್ರಸನ್ನ ಕೆ.ಎ. ಎಸ್. ಬೆಂಗಳೂರು ಅವರ ಲೇಖನ- 'ಕುಮಾರವ್ಯಾಸನ ವಂಶಾವಳಿ' -ಗಮಕ ಸಂಪದ ಸಂಚಿಕೆ ೪ ಮತ್ತು ೫ ಸಂಪುಟ ೧೦. ಹೊಸ ಹಳ್ಳಿ) (೧)ಗಮಕಸಿರಿ -ಸ್ಮರಣ ಸಂಚಿಕೆ ೧೯೯೭ -( ಶ್ರೀ ಜಗನ್ನಾಥ ಶಾಸ್ತ್ರೀ) ಉಲ್ಲೇಖ ಪ್ರಾಚೀನ ಹಳಗನ್ನಡ ಸಾಹಿತಿಗಳು ಭಾಮಿನಿ ಷಟ್ಪದಿಕಾರ ರೂಪಕ ಸಾಮ್ರಾಜ್ಯದ ಚಕ್ರವರ್ತಿ ಕನ್ನಡ ಸಾಹಿತ್ಯ
965
https://kn.wikipedia.org/wiki/%E0%B2%B0%E0%B2%BE%E0%B2%B9%E0%B3%81%E0%B2%B2%E0%B3%8D%20%E0%B2%A6%E0%B3%8D%E0%B2%B0%E0%B2%BE%E0%B2%B5%E0%B2%BF%E0%B2%A1%E0%B3%8D
ರಾಹುಲ್ ದ್ರಾವಿಡ್
ರಾಹುಲ್ ಶರದ್ ದ್ರಾವಿಡ್ (ಜನನ: ಜನವರಿ ೧೧, ೧೯೭೩) - ಇವರು ಭಾರತ ಕ್ರಿಕೆಟ್ ತಂಡದ ಆಟಗಾರರಲ್ಲೊಬ್ಬರು ಮತ್ತು ತಂಡದ ಮಾಜಿ ನಾಯಕ. ಮದ್ಯಪ್ರದೇಶ ಮೂಲದವರಾದ ದ್ರಾವಿಡ್ ಪೂರ್ಣ ಕನ್ನಡಿಗರು. ಟೆಸ್ಟ್ ಪಂದ್ಯಗಳಲ್ಲಿ ೧೦,೦೦೦ಕ್ಕೂ ಅಧಿಕ ರನ್ನುಗಳನ್ನು ಗಳಿಸುವುದರಲ್ಲಿ, ಸಚಿನ್ ತೆಂಡೂಲ್ಕರ್ ಮತ್ತು ಸುನಿಲ್ ಗವಾಸ್ಕರ್ ನಂತರ ಮೂರನೇಯ ಸ್ಥಾನ ಪಡೆದ ಭಾರತೀಯ. ಫೆಬ್ರುವರಿ ೧೪, ೨೦೦೭ ರಂದು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ೧೦,೦೦೦ಕ್ಕೂ ಅಧಿಕ ರನ್ನುಗಳನ್ನು ಗಳಿಸಿ ವಿಶ್ವದ ೬ನೇ ಆಟಗಾರ ಎಂದು ಗುರುತಿಸಿಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ಅವರ ನಂತರ ರಾಹುಲ್ ದ್ರಾವಿಡ್ ಮೂರನೇ ಭಾರತೀಯ. ಇವರು ಅಕ್ಟೋಬರ್ ೨೦೦೫ರಲ್ಲಿ ಭಾರತದ ಕ್ರಿಕೆಟ್ ತಂಡಕ್ಕೆ ನಾಯಕನಾಗಿ ಆಯ್ಕೆಯಾಗ, ಸೆಪ್ಟೆಂಬರ್ ೨೦೦೭ ರಲ್ಲಿ ತಂಡದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ರಾಹುಲ್ ಡ್ರಾವಿಡ್ ಭಾರತೀಯ ಪ್ರಿಮಿಯರ್ ಲೀಗ್ ನ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ೨ ವರ್ಷ್ 'ಐಕಾನ್ ಆಟಗಾರ'ನಾಗಿ ಆಡಿ, ಈಗ ಜೈಪೂರದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ರಾಹುಲ್ ದ್ರಾವಿಡ್‌ಗೆ, ೨೦೦೦ರಲ್ಲಿ, "ವಿಜಡನ್ ಕ್ರಿಕೆಟರ್" ಎಂದು ಗೌರವಿಸಲಾಗಿದೆ. . ದ್ರಾವಿಡ್‌ಗೆ, ೨೦೦೪ರಲ್ಲಿ, ವರ್ಷದ ಐಸಿಸಿ ಪ್ಲೆಯರ್ ಹಾಗೂ ವರ್ಷದ ಟೆಸ್ಟ್ ಆಟಗಾರನೆಂದೂ ಸನ್ಮಾನಿಸಲಾಗಿದೆ. . ರಾಹುಲ್ ದ್ರಾವಿಡ್, ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಕ್ಯಾಚ್ (೨೧೦) ಹಿಡಿದ ಆಟಗಾರರಾಗಿರುತ್ತಾರೆ. ೭ ಅಗಸ್ಟ್ ೨೦೧೧ ರಂದು, ಒಂದು ದಿನದ ಹಾಗೂ ಟಿ ೨೦ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು. ೨೦೧೨ ಮಾರ್ಚಿ ೯ ರಂದು ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದರು. ೨೦೧೩ ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಯನ್ನು ಇವರಿಗೆ ನೀಡಲಾಗಿದೆ. ದಿನಾಂಕ ನವೆಂಬರ್ ೧ ೨೦೧೨ರಂದು ಸಿಡ್ನಿಯಲ್ಲಿ ನಡೆದ ಏಳನೆಯ ಬ್ರಾಡ್ಮನ್ ವಾರ್ಷಿಕ ಪುರಸ್ಕಾರ ಸಮಾರಂಭದಲ್ಲಿ ರಾಹುಲ್ ದ್ರಾವಿಡ್ ಹಾಗು ಗ್ಲೆನ್ ಮ್ಯಾಕ್ಗ್ರಾಥ್ ಅವರುಗಳನ್ನು ಸನ್ಮಾನಿಸಲಾಯಿತು. ಭಾರತದ ಮೂರನೇ ಹಾಗು ನಾಲ್ಕನೆಯ ಅತ್ಯುಚ್ಚ ನಾಗರಿಕ ಸನ್ಮಾನವಾದ ಪದ್ಮ ಭೂಷಣ ಹಾಗು ಪದ್ಮ ಶ್ರೀ ಪುರಸ್ಕಾರಗಳಿಗೂ ಸಹ ರಾಹುಲ್ ದ್ರಾವಿಡ್ ಭಾಜನರಾಗಿದ್ದಾರೆ. ೨೦೧೪ರಲ್ಲಿ ಬೆಂಗಳೂರಿನ ಗೋ ಸ್ಪೋರ್ಟ್ಸ್ ಪ್ರತಿಷ್ಠಾನದ ಸಲಹಾ ಮಂಡಳಿಯ ಸದಸ್ಯರಾಗಿ ರಾಹುಲ್ ದ್ರಾವಿಡ್ ಅವರು ಸೇರ್ಪಡೆಯಾದರು. ಗೋ ಸ್ಪೋರ್ಟ್ಸ್ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಭಾರತದ ಭವಿಷ್ಯ ಒಲಿಂಪಿಕ್ ಸ್ಪರ್ಧಾಳುಗಳನ್ನು ರೂಪಿಸುವ ಯೋಜನೆಯಲ್ಲಿ ರಾಹುಲ್ ದ್ರಾವಿಡ್ ತೊಡಗಿಸಿಕೊಂಡಿದ್ದಾರೆ. ರಾಹುಲ್ ದ್ರಾವಿಡ್ರವರ ನೇತೃತ್ವದ ಮೇಲಿನ ಯೋಜನೆಯಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರರಾದ ಪ್ರನ್ನೊಯ್ ಕುಮಾರ್, ಈಜುಗಾರಾದ ಶರತ್ ಗಾಯಕ್ವಾಡ್ ಹಾಗು ಯುವ ಗೋಲ್ಫೆರ್ ಚಿಕ್ಕರಂಗಪ್ಪ ರವರು ಸ್ಪರ್ಧಾಳುಗಳನ್ನು ರೂಪಿಸುವ ಪ್ರಥಮ ತಂಡದ ತರಬೇತಿಯಲ್ಲಿ ಭಾಗಿಯಾಗಿದ್ದರು. ಬಾಲ್ಯ ಮತ್ತು ಕ್ರಿಕೆಟ್ ಜೀವನದ ಮೊದಲ ಘಟ್ಟಗಳು ದ್ರಾವಿಡ ಅವರು ತಮ್ಮ ೧೨ನೇ ವಯಸ್ಸಿನಲ್ಲೇ ಕ್ರಿಕೆಟ್ ಆಡಲು ಪ್ರಾರಂಭಿಸಿದರು ಮತ್ತು ಕರ್ನಾಟಕ ರಾಜ್ಯದ ಪರವಾಗಿ ಅಂಡರ್-೧೫, ಅಂಡರ್-೧೭, ಅಂಡರ್-೧೯ ಮಟ್ಟದ ತಂಡಗಳಲ್ಲಿ ಆಡಿದ್ದರು. ಇವರ ಪ್ರತಿಭೆಯನ್ನು ಮೊದಲು ಗುರುತಿಸಿದ್ದು ಮಾಜಿ ಕ್ರಿಕೆಟ್ ಆಟಗಾರರಾದ ಕೆಕಿ ತಾರಾಪೊರ್‌ರವರು. ತಮ್ಮ ಶಾಲೆಗೆ ಆಡಿದ ಮೊದಲನೆಯ ಪಂದ್ಯದಲ್ಲೇ ಶತಕ ಬಾರಿಸಿದ ದ್ರಾವಿಡ್, ಬ್ಯಾಟ್ಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಕೂಡ ಮಾಡುತ್ತಿದ್ದರು. ಆದರೆ ಇವರು ಮಾಜಿ ಟೆಸ್ಟ್ ಆಟಗಾರರಾದ ಗುಂಡಪ್ಪ ವಿಶ್ವನಾಥ್, ರೋಜರ್ ಬಿನ್ನಿ, ಬ್ರಿಜೇಶ್ ಪಟೇಲ್ ಮತ್ತು ತಾರಾಪೊರ್ ರವರ ಸಲಹೆಯಂತೆ ವಿಕೆಟ್ ಕೀಪಿಂಗ್ ಮಾಡುವುದನ್ನು ನಿಲ್ಲಿಸಿದರು. ಕ್ರಿಕೆಟ್ ೧೯೯೬ರಿಂದ ಭಾರತ ಕ್ರಿಕೆಟ್ ತಂಡದ ಸದಸ್ಯರಾಗಿರುವ ರಾಹುಲ್ ದ್ರಾವಿಡ್ ಬಲಗೈ ಬ್ಯಾಟ್ಸ್‌ಮನ್. ಕೆಕಿ ತಾರಾಪೊರ್‌ರವರ ಬಳಿ ಅಭ್ಯಾಸ ಮಾಡಿದ ಇವರು ಬ್ಯಾಟಿಂಗ್‌ನ ಅತ್ಯುತ್ತಮ ತಾಂತ್ರಿಕತೆಗೆ ಹೆಸರುವಾಸಿ. ಔಟಾಗದೆಯೇ ತೀಕ್ಷ್ಣವಾಗಿ ಬ್ಯಾಟಿಂಗ್ ಮಾಡುವ ಇವರಿಗೆ ಸುದ್ದಿ ಮಾಧ್ಯಮದವರಿಂದ "ದ ವಾಲ್" (ಗೋಡೆ) ಎಂದೂ ಬಣ್ಣಿಸಲಾಗುತ್ತದೆ. ಇವರ ಖಾತೆಯಲ್ಲಿ ಈಗಾಗಲೆ ಟೆಸ್ಟ್ ಕ್ರಿಕೆಟ್‌ನ ೩೬ ಶತಕಗಳು (ಸರಾಸರಿ ೫೪ರಲ್ಲಿ) ಇವೆ. ಒಂದು ದಿನದ ಅಂತರ ರಾಷ್ಟ್ರೀಯ ಪಂದ್ಯಗಳಲ್ಲಿ ಇವರ ಸರಾಸರಿ ೩೯ (ಸ್ಟ್ರೈಕ್ ರೇಟ್ - ೬೯). ಇವರು ಆಗಿಂದಾಗ್ಗೆ ತಂಡಕ್ಕೆ ವಿಕೆಟ್ ಕೀಪಿಂಗ್ ಕೂಡ ಮಾಡುತ್ತಿದ್ದರು. ಭಾರತ ಹಾಗೂ ಕರ್ನಾಟಕಕ್ಕೆ ಆಡುವುದಲ್ಲದೆ ದ್ರಾವಿಡ್ ಕೆಂಟ್ ಹಾಗೂ ಸ್ಕಾಟ್ಲ್ಯಾಂಡ್‌ಗೆ ಕೂಡ ಆಡಿದ್ದಾರೆ. ಇವರ ಚೊಚ್ಚಲ ಟೆಸ್ಟ್ ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಭಾರತದ ೧೯೯೬ರ ಇಂಗ್ಲೆಂಡ್‌ ಪ್ರವಾಸದ ಎರಡನೆ ಯ ಟೆಸ್ಟ್ ಪಂದ್ಯ. ಒಂದು ದಿನದ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅದೇ ವರ್ಷ ಸಿಂಗಪೂರಿನಲ್ಲಿ ನಡೆದ ಸಿಂಗರ್ ಕಪ್‌ನ ಶ್ರೀಲಂಕಾ ವಿರುದ್ಧದ ಪಂದ್ಯದಿಂದ ಪಾದಾರ್ಪಣೆ ಮಾಡಿದರು. ವಿಸ್ಡನ್ ಸಂಸ್ಥೆಯು ಇವರನ್ನು ೨೦೦೦ನೆ ವರ್ಷದಲ್ಲಿ, ವರ್ಷದ ಕ್ರಿಕೆಟಿಗನೆಂದು ಪುರಸ್ಕರಿಸಿತು. ೨೦೦೪ ರಲ್ಲಿ ಇವರಿಗೆ ಭಾರತ ಸರಕಾರವು ಪದ್ಮಶ್ರೀ ಪ್ರಶಸ್ತಿ ಕೊಟ್ಟು ಗೌರವಿಸಿತು. ೨೦೦೪, ಸೆಪ್ಟೆಂಬರ್ ೭ರಂದು ಇವರಿಗೆ ಐಸಿಸಿಯು ವರ್ಷದ ಆಟಗಾರನೆಂದೂ, ವರ್ಷದ ಅತ್ಯುತ್ತಮ ಟೆಸ್ಟ್ ಆಟಗಾರ ನೆಂದೂ ಗೌರವಿಸಿತು. ೨೦೦೪ರಲ್ಲಿ ಇವರು ಭಾರತ ತಂಡದ ಉಪನಾಯಕರಾಗಿದ್ದರು. ಕೆಲವೊಮ್ಮೆ ಸೌರವ್ ಗಂಗೂಲಿ ಇಲ್ಲದಿರುವಾಗ ಭಾರತ ತಂಡದ ನಾಯಕತ್ವ ವಹಿಸಿದ್ದರು. ೨೦೦೫ರಲ್ಲಿ ಭಾರತದ ನಾಯಕತ್ವ ವಹಿಸಿಕೊಂಡ ಇವರು, ಶ್ರೀಲಂಕಾ ವಿರುದ್ಧ ಸರಣಿ ಜಯ ಪಡೆದು, ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತದಲ್ಲಿ ನಡೆದ ಸರಣಿಯನ್ನು ೨-೨ರಿಂದ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಡಾನ್ ಬ್ರಾಡ್ಮನ್ ಮತ್ತು ಸಚಿನ್ ತೆಂಡೂಲ್ಕರ್ ಬಳಿಕ ವಿಶ್ವದ ಆಗ್ರಮಾನ್ಯ ಆಟಗಾರ ಎಂದು ಕರೆಸಿಕೊಳ್ಳುವ ರಾಹುಲ್ ಹದಿನಾರು ವರ್ಷದ ಅಂತರ್ ರಾಷ್ಟ್ರೀಯ ಕ್ರಿಕೆಟ್ ನ ಸಾಧನೆಗಳು ಮತ್ತು ಧಾಖಲೆಗಳು ಒಂದೆರಡಲ್ಲ. ಸಚಿನ್ ಬಳಿಕ ಭಾರತದ ಪರ ಅತ್ಯಂತ ಹೆಚ್ಹು ಟೆಸ್ಟ್ ರನ್ (೧೩,೨೮೮) ಗಳಿಸಿದಾತ. ಮೂರನೇ ಕ್ರಮಾಂಕದಲ್ಲಿ ಬಂದು ಒಟ್ಟು ಹತ್ತು ಸಾವಿರ ರನ್ ಹೊಡೆದ ವಿಶ್ವದ ಏಕೈಕ ಕ್ರಿಕೆಟಿಗ. ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯದಿಕ (88) ಶತಕದ ಜೊತೆಯಾಟ ನೀಡಿದಾತ. ಟೆಸ್ಟ್ ಆಡುವ ಎಲ್ಲ ಹತ್ತು ದೇಶಗಳ ವಿರುದ್ದ ಶತಕ ಬಾರಿಸಿರುವ ವಿಶ್ವದ ಏಕೈಕ ಆಟಗಾರ. ಟೆಸ್ಟ್ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಹೆಚ್ಹು ಚೆಂಡುಗಳನ್ನು (೩೧೨೫೮)ಎದುರಿಸಿರುವ ಆಟಗಾರ. ಸೊನ್ನೆ ಹೊಡೆಯದೆ ಅತ್ಯದಿಕ (೧೭೩) ಇನ್ನಿಂಗ್ಸ್ ಗಳನ್ನು ಸತತವಾಗಿ ಆಡಿರುವ ವಿಶ್ವದ ಏಕೈಕ ಆಟಗಾರ. ಡಾನ್ ಬ್ರಾಡ್ಮನ್ ನಂತರ ಸತತ ಮೂರು ಸರಣಿಗಳಲ್ಲಿ ಡಬಲ್ ಸೆಂಚುರಿ ಹೊಡೆದ ಏಕೈಕ ಕ್ರಿಕೆಟಿಗ. ಆಗಸ್ಟ್ ೨೦೧೧ರಲ್ಲಿ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ನಲ್ಲಿ ೧೦,೦೦೦ ರನ್ ಗಳಿಸಿರುವ ರಾಹುಲ್ ದ್ರಾವಿಡ್ ಸಾಧನೆಯನ್ನು ನೆನಪಿಸುವ ಗೋಡೆಯೊಂದನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿರ್ಮಿಸಿದ್ದಾರೆ. ಗೋಡೆಯ ಮೇಲೆ ದ್ರಾವಿಡ್ ಆಟದ ಮೂರು ಗುಣಗಳಾದ ಬದ್ಧತೆ, ದೃಢತೆ ಹಾಗೂ ಉತ್ಕೃಷ್ಟತೆಯನ್ನು ಬಿಂಬಿಸಲಾಗಿದೆ. ಕೆಎಸ್ ಸಿಎ ಹಾಗೂ ಸ್ಕೈಲೈನ್ ಬಿಲ್ಡರ್ಸ್ ಈ ಗೋಡೆಗೆ 'ದಿ ವಾಲ್' ಎಂದೇ ಹೆಸರಿಸಿವೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 'ದಿ ವಾಲ್' ಅನ್ನು ಅನಾವರಣಗೊಳಿಸಿದ್ದರು. ಈ ಗೋಡೆಯು ೧೫ ಅಡಿ ಎತ್ತರ ಹಾಗೂ ೨೭ ಅಡಿ ಅಗಲವಿದ್ದು ಇದರ ನಿರ್ಮಾಣಕ್ಕಾಗಿ ೧೦,೦೦೦ ಇಟ್ಟಿಗೆಗಳನ್ನು ಬಳಸಲಾಗಿದೆ. ಕವರ್ ಡ್ರೈವ್ ಭಂಗಿಯ ಶಿಲ್ಪ ಹೊಂದಿದ್ದು, ಗೋಡೆಗೆ ವಿದ್ಯುನ್ಮಾನ ಪರದೆಯನ್ನು ಅಳವಡಿಸಲಾಗಿದ್ದು, ದ್ರಾವಿಡ್ ಪ್ರತಿ ರನ್ ಗಳಿಸುತ್ತಿದ್ದಾಗ ಒಟ್ಟು ರನ್ ಇಲ್ಲಿನ ವಿದ್ಯುನ್ಮಾನ ಪರದೆಯಲ್ಲಿ ಮೂಡುತಿತ್ತು. ೨೦೧೨ ಮಾರ್ಚಿ ೯ ರಂದು ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದರು. ಪ್ರತಿನಿಧಿಸಿದ ತಂಡಗಳು ಅಂತರ್ರಾಷ್ಟ್ರೀಯ ಭಾರತ ಏಸಿಸಿ ಏಷ್ಯಾ ‍೧೧ ಐಸಿಸಿ ವರ್ಡ್ಲ ೧೧ ಎಮ್‌ಸಿಸಿ ದೇಶಿಯ ಕರ್ನಾಟಕ ಸೌಥ್ ಝೋನ್ ಇಂಡಿಯನ್ ಫ್ರಿಮಿಯರ್ ಲೀಗ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ಇಂಗ್ಲೀಷ್ ಕೌಂಟಿ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್ ಸ್ಕೌಟಿಶ್ ಕ್ರಿಕೆಟ್ ಟೀಮ್ ಪ್ರಶಸ್ತಿಗಳು / ಗೌರವಗಳು ೧೯೯೯: ಸಿಯೆಟ್ ಕ್ರಿಕೆಟರ್ ಆಫ್ ೧೯೯೯ ವರ್ಲ್ಡ್ ಕ ೨೦೦೦: 'ವಿಸ್ಡನ್ ವರ್ಷದ ಕ್ರಿಕೆಟಿಗ' ಪ್ರಶಸ್ತಿ. ೨೦೦೪: 'ಸರ್ ಗಾರ್ಫೀಲ್ಡ್ ಸೋಬರ್ಸ್' ಪ್ರಶಸ್ತಿ.( ವರ್ಷದ ಐಸಿಸಿ ಕ್ರಿಕೆಟಿಗನಿಗೆ ಕೊಡಲಾಗುತ್ತದೆ) ೨೦೦೪: ಭಾರತ ಸರ್ಕಾರದ ಪದ್ಮಶ್ರಿ ಪ್ರಶಸ್ತಿ. ೨೦೦೪; ವರ್ಷದ ಐಸಿಸಿ ಟೆಸ್ತ್ ಆಟಗಾರ. ೨೦೦೬: ಐಸಿಸಿ ಟೆಸ್ಟ್ ತಂಡದ ನಾಯಕ. ೨೦೧೩: ಪದ್ಮಭೂಷಣ ಪ್ರಶಸ್ತಿ ಗೌರವ ಡಾಕ್ಟರೇಟ್‌ ನಿರಾಕರಣೆ : ಬೆಂಗಳೂರು ವಿಶ್ವವಿದ್ಯಾಲಯವು 52ನೇ ಘಟಿಕೋತ್ಸವದ ಅಂಗವಾಗಿ ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್‌ ಪದವಿಯನ್ನು ನಯವಾಗಿ ನಿರಾಕರಿಸಿದ ರಾಹುಲ್‌ ದ್ರಾವಿಡ್‌ ಸಂಶೋಧನೆ ಮಾಡಿಯೇ ಡಾಕ್ಟರೇಟ್‌ ಪಡೆಯುವುದಾಗಿ ತಿಳಿಸಿದ್ದಾರೆ. ಟೆಸ್ಟn ಕ್ರಿಕೆ.mಟ್mm ಪ್ರಶಸ್ತಿಗಳು . ಹೊರಗಿನ ಸಂಪರ್ಕಗಳು ಕ್ರಿಕ್ ಇನ್ಫೊ - ಆಟಗಾರರ ಪ್ರೊಫೈಲ್‌ನಲ್ಲಿ ರಾಹುಲ್ ದ್ರಾವಿಡ್ ಬಗ್ಗೆ ಮಾಹಿತಿ http://deepakkasavanahally.wordpress.com/2012/03/12/dravid/ದ್ರಾವಿಡ್ ಮೈದಾನದಲ್ಲಿನ ಮರೆಯಲಾಗದ ಕ್ಷಣಗಳು. ಉಲ್ಲೇಖಗಳು http://www.prajavani.net/news/article/2017/01/25/468198.html ಭಾರತದ ಕ್ರಿಕೆಟ್ ಕ್ರೀಡಾಪಟುಗಳು ಕ್ರಿಕೆಟ್ ಭಾರತ ಕ್ರಿಕೆಟ್ ತಂಡ ಭಾರತದ ಕ್ರೀಡಾಪಟುಗಳು ಕರ್ನಾಟಕದ ಕ್ರೀಡಾಪಟುಗಳು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಕ್ರಿಕೆಟ್ ಆಟಗಾರ
968
https://kn.wikipedia.org/wiki/%E0%B2%A4%E0%B3%81%E0%B2%82%E0%B2%97%E0%B2%BE
ತುಂಗಾ
ತುಂಗಾ ನದಿ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನದಿ. ತುಂಗಾ ನದಿ ಪಶ್ಚಿಮ ಘಟ್ಟಗಳ ವರಾಹ ಪರ್ವತದಲ್ಲಿರುವ ಗಂಗಾ ಮೂಲದಲ್ಲಿ ಹುಟ್ಟುತ್ತದೆ. ಅಲ್ಲಿಂದ ಇದು ಕರ್ನಾಟಕದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಮೂಲಕ ಹರಿಯುತ್ತದೆ. ಸುಮಾರು 147 ಕಿ.ಮೀ. ದೂರದವರೆಗೆ ಹರಿದು ಶಿವಮೊಗ್ಗ ಜಿಲ್ಲೆಯ ಕೂಡ್ಲಿಯಲ್ಲಿ ಭದ್ರಾ ನದಿಯೊಂದಿಗೆ ಸಂಗಮಗೊಳ್ಳುತ್ತದೆ. ಇದರ ನಂತರ ತುಂಗಭದ್ರಾ ಎಂಬ ಹೆಸರು ಪಡೆದು ಮುಂದೆ ಆಂಧ್ರ ಪ್ರದೇಶದಲ್ಲಿ ಕೃಷ್ಣಾ ನದಿಯನ್ನು ಸೇರುತ್ತದೆ. ತುಂಗಾ ನದಿ ಸಿಹಿನೀರಿಗೆ ಪ್ರಸಿದ್ಧ. "ತುಂಗಾ ಪಾನಂ ಗಂಗಾ ಸ್ನಾನಂ" ಎಂಬ ಗಾದೆಯೇ ಇದೆ! ತುಂಗಾ ನದಿಗೆ ಗಾಜನೂರಿನಲ್ಲಿ ಒಂದು ಅಣೆಕಟ್ಟನ್ನು ಕಟ್ಟಲಾಗಿದೆ. ಭದ್ರಾ ನದಿಯೊಂದಿಗೆ ಸೇರಿದ ಮೇಲೆ ತುಂಗಭದ್ರಾ ನದಿಗೆ ಹೊಸಪೇಟೆಯಲ್ಲಿ ಇನ್ನೊಂದು ಅಣೆಕಟ್ಟನ್ನು ಕಟ್ಟಲಾಗಿದೆ. ತುಂಗಾ ನದಿಯ ದಡದ ಮೇಲಿರುವ ಒಂದು ಪ್ರಸಿದ್ಧ ಸ್ಥಳವೆಂದರೆ ಶೃಂಗೇರಿ. ತೀರ್ಥಹಳ್ಳಿ ಮತ್ತು ಶಿವಮೊಗ್ಗ ತುಂಗಾ ನದಿಯ ತೀರದಲ್ಲಿರುವ ಇತರ ಪ್ರಮುಖ ಪಟ್ಟಣಗಳು. ಭೂಗೋಳ ಜಲಸಮೂಹಗಳು ನದಿಗಳು ಭಾರತದ ನದಿಗಳು ಕರ್ನಾಟಕದ ನದಿಗಳು
970
https://kn.wikipedia.org/wiki/%E0%B2%97%E0%B2%82%E0%B2%97%E0%B3%8D%E0%B2%A8%E0%B2%BF%E0%B2%B9%E0%B3%86%E0%B2%B8%E0%B3%8D%E0%B2%B8%E0%B3%8A
ಗಂಗ್ನಿಹೆಸ್ಸೊ
ಗಂಗ್ನಿಹೆಸ್ಸೊ - ಸಾಂಪ್ರದಾಯಿಕ "ದಹೊಮಿಯ ಹನ್ನೆರಡು ರಾಜರು" ಗಳಲ್ಲಿ ಮೊದಲನೆಯವ. ಇವನ ರಾಜ್ಯಭಾರ ಸುಮಾರು ೧೬೨೦ರಲ್ಲಿ ನಡೆದಿರಬಹುದು. ಇವನ ಲಾಂಛನಗಳು ಒಂದು ಗಂಗ್ನಿಹೆಸ್ಸೊ ಪಕ್ಷಿ (ಈ ಪಕ್ಷಿ ಅವನ ಹೆಸರನ್ನು ಸೂಚಿಸುತ್ತಿತ್ತು), ಒಂದು ಡೋಲು, ಹಾಗೂ ಎಸೆಯುವ/ಶಿಕಾರಿ ಮಾಡುವ ಕೋಲುಗಳು. ಇವನು ನಿಜವಾಗಿಯೂ ರಾಜನಾಗಿ ಕಾರ್ಯನಿರ್ವಹಿಸಿದ್ದು ಐತಿಹಾಸಿಕವಾಗಿ ಸ್ಪಷ್ಟವಿಲ್ಲ. ಆದರೆ ಇವನು ತನ್ನ ತಮ್ಮ ಡಾಕೊಡೊನೊ ಮೂಲಕ ತನ್ನ ಸಲಹೆಗಳ ಶಕ್ತಿಯನ್ನುಪಯೋಗಿಸಿ ಸಮುದಾಯದ ವ್ಯವಹಾರಗಳನ್ನು ನಡೆಸಲು ಸಹಾಯ ಮಾಡಿದ ಪ್ರಭಾವಶಾಲಿ ನಾಯಕನಾಗಿದ್ದಿರಬಹುದು. ಡಾಕೊಡೊನೊ ತನ್ನ ಜೀವನಕಾಲದಲ್ಲಿ ರಾಜನೆಂದು ಕರೆಯಲ್ಪಟ್ಟಿದ್ದ. ಆಫ್ರಿಕಾ ಖಂಡ ಇತಿಹಾಸ
971
https://kn.wikipedia.org/wiki/%E0%B2%85%E0%B2%A8%E0%B2%BF%E0%B2%B2%E0%B3%8D%20%E0%B2%95%E0%B3%81%E0%B2%82%E0%B2%AC%E0%B3%8D%E0%B2%B3%E0%B3%86
ಅನಿಲ್ ಕುಂಬ್ಳೆ
ಅನಿಲ್ ಕೃಷ್ಣಸ್ವಾಮಿ ಕುಂಬ್ಳೆ (ಜನನ: ಅಕ್ಟೋಬರ್ ೧೭, ೧೯೭೦ ಬೆಂಗಳೂರಿನಲ್ಲಿ) - ಭಾರತದ ಮಾಜಿ ಕ್ರಿಕೆಟ್ ಆಟಗಾರ ಮತ್ತು ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ. ಕುಂಬ್ಳೆ ಲೆಗ್ ಸ್ಪಿನ್ನರ್. ಇವರು ತಮ್ಮದೇ ಆದ ಬೌಲಿಂಗ್ ಶೈಲಿಗೆ ಹೆಸರುವಾಸಿ, ಇವರ ಗೂಗ್ಲಿ ಕ್ರಿಕೆಟ್ ಜಗತ್ತಿನಲ್ಲಿ ಬಹಳ ಪ್ರಸಿದ್ಧ. ಇವರು ಮೊದಲು ಮಧ್ಯ ವೇಗದ ಬೌಲರ್ ಆಗಿ ಕ್ರಿಕೆಟ್ ಪ್ರವೇಶಿಸಿದ್ದು; ಇದು ಅವರಿಗೆ ಕೊಡುಗೆ ಎಂಬಂತೆ ವೇಗವಾಗಿ ಬೌಲ್ ಮಾಡಲು ಸಹಾಯಕವಾಗಿದೆ. ಸಾಧಾರಣವಾಗಿ ಸ್ಪಿನ್ ಬೌಲರ್‌ಗಳು ಬಾಲ್ ಹಾಕುವ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಬೌಲ್ ಮಾಡುವ ಅನಿಲ್ ಕುಂಬ್ಳೆ, ೫೩೦ಕ್ಕೂ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದಿದ್ದಾರೆ. ಇವರು ಒಂದು ದಿನದ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು ಎಪ್ರಿಲ್ ೨೫, ೧೯೯೦ ರಂದು, ಶ್ರೀಲಂಕಾ ಮೇಲಿನ ಪಂದ್ಯದಲ್ಲಿ. ಅದೇ ವರ್ಷ ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಕಾಲಿಟ್ಟರು. ಕ್ರಿಕೆಟ್ ಜೀವನ ಭಾರತ ೧೯೯೨ರಲ್ಲಿ ದಕ್ಷಿಣ ಆಫ್ರಿಕ ಪ್ರವಾಸ ಮಾಡಿದಾಗ ಇವರು ತಮ್ಮ ಗುಣಮಟ್ಟವನ್ನು ಸ್ಥಾಪಿಸಿದರು, ೨ನೇ ಟೆಸ್ಟ್‌ನಲ್ಲಿ ೮ ವಿಕೆಟ್‌ಗಳನ್ನು ಉರುಳಿಸಿದರು. ಅದೇ ವರ್ಷ ಇಂಗ್ಲೆಂಡ್ ಭಾರತಕ್ಕೆ ಪ್ರವಾಸ ಬಂದಾಗ, ಕೇವಲ ೩ ಪಂದ್ಯಗಳಲ್ಲಿ ೨೧ ವಿಕೆಟ್‌ಗಳನ್ನು ಸರಾಸರಿ ೧೯.೮ ರಲ್ಲಿ ತೆಗೆದುಕೊಂಡರು. ಇವರು ಮೊದಲ ೫೦ ವಿಕೆಟ್‌ಗಳನ್ನು ಕೇವಲ ೧೦ ಟೆಸ್ಟ್ ಪಂದ್ಯಗಳಲ್ಲಿ ತೆಗೆದುಕೊಂಡರು. ಇದನ್ನು ಸಾಧಿಸಿದ ಭಾರತದ ಏಕೈಕ ಬೌಲರ್‌ ಆಗಿ ಉಳಿದಿದ್ದಾರೆ. ಎರಪಳ್ಳಿ ಪ್ರಸನ್ನರವರಾದ ಮೇಲೆ ೧೦೦ ಟೆಸ್ಟ್ ವಿಕೆಟ್‌ಗಳನ್ನು ಬಹು ಬೇಗ ಪಡೆದ ಎರಡನೆಯ ಭಾರತದ ಬೌಲರ್ ಇವರಾದರು. ಇವರು ಇದನ್ನು ಸಾಧಿಸಿದ್ದು ೨೧ ಪಂದ್ಯಗಳಲ್ಲಿ. ಒಂದುದಿನದ ಪಂದ್ಯಗಳಲ್ಲಿ, ಇವರ ಜೀವನದ ಅತುತ್ತಮ ಸಾಧನೆ ಬಂದದ್ದು ನವೆಂಬರ್ ೨೭, ೧೯೯೩ ರಲ್ಲಿ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಹೀರೋ ಕಪ್ ಫೈನಲ್ ಪಂದ್ಯದಲ್ಲಿ, ಇವರು ಕೇವಲ ೧೨ ರನ್‌ಗಳಿಗೆ ೬ ವಿಕೆಟ್‌ಗಳನ್ನು ಉರುಳಿಸಿದರು. ಈ ದಾಖಲೆ ಭಾರತದ ಯಾವುದೇ ಬೌಲರ್‌ನ ಅತ್ಯುತ್ತಮ ಸಾಧನೆಗಿಂತ ಹಿರಿದಾದುದಲ್ಲದೆ, ೧೦ ವರ್ಷಗಳಿಂದಲೂ ಇದು ಖಾಯಂ ಆಗಿ ಯಾರಿಂದಲೂ ಮುರಿಯದೆಯೇ ಉಳಿದಿದೆ. ವರ್ಷವಾರು ನೋಡಿದಲ್ಲಿ, ಇವರು ಒಂದು ದಿನದ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ್ದು ೧೯೯೬ರಲ್ಲಿ. ಈ ವರ್ಷದಲ್ಲಿ ಇವರು ೬೧ ವಿಕೆಟ್‌ಗಳನ್ನು ಉರುಳಿಸಿದರು, ಒಟ್ಟು ೨೦.೨೪ ಸರಾಸರಿಯಲ್ಲಿ. ಇವರ ಎಕಾನಮಿ ರೇಟ್ ೪.೦೬ ಆಗಿತ್ತು. ಇದೇ ವರ್ಷ ಏಶಿಯಾದಲ್ಲಿ ವಿಶ್ವ ಕಪ್ ನಡೆದದ್ದು. ಲೋಕದಾಖಲೆ ಒಂದು ಟೆಸ್ಟ್ ಇನ್ನಿಂಗ್ಸಿನಲ್ಲಿನ ಎಲ್ಲಾ ಹತ್ತು ವಿಕೆಟುಗಳನ್ನು ಪಡೆದ ವಿಶ್ವದ ಎರಡೇ ಬೌಲರುಗಳಲ್ಲಿ, ಅನಿಲ್ ಕುಂಬ್ಳೆ ಒಬ್ಬರಾಗಿದ್ದಾರೆ. ಇನ್ನೊಬ್ಬರು ಇಂಗ್ಲೆಂಡಿನ ಜಿಂ ಲೇಕರ್. ಈ ಸಾಧನೆಯನ್ನು ಕುಂಬ್ಳೆ ಫೆಬ್ರವರಿ ೪-ಫೆಬ್ರವರಿ ೮ ೧೯೯೯ನಲ್ಲಿ ನವದೆಹಲಿಯಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮಾಡಿದರು. ಈ ವಿಶ್ವದಾಖಲೆಯ ಸಾಧನೆಯ ಸ್ಮರಣಾರ್ಥಕವಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಪಕ್ಕದಲ್ಲಿರುವ ಎಂ.ಜಿ.ರಸ್ತೆಯಲ್ಲಿನ ವೃತ್ತಕ್ಕೆ, ಅನಿಲ್ ಕುಂಬ್ಳೆ ವೃತ್ತ(Anil Kumble Circle) ಎಂದು ನಾಮಕರಣ ಮಾಡಲಾಗಿದೆ. ಮೈಲಿಗಲ್ಲುಗಳು ಡಿಸೆಂಬರ್ ೧೦, ೨೦೦೪ - ಕಪಿಲ್ ದೇವ್ ಅವರ ೪೩೪ ವಿಕೆಟುಗಳನ್ನು ದಾಟಿದ ಅನಿಲ್ ಕುಂಬ್ಳೆ. ಅತ್ಯಂತ ಹೆಚ್ಚು ಟೆಸ್ಟ್ ವಿಕೆಟ್‍ಗಳನ್ನು ಪಡೆದ ಭಾರತದ ಬೌಲರ್ ಎಂಬ ಕೀರ್ತಿ. ಮಾರ್ಚ್ ೧೧, ೨೦೦೬ - ೫೦೦ ಟೆಸ್ಟ್ ವಿಕೆಟುಗಳ ಸಾಧನೆ ಜೂನ್ ೧೧, ೨೦೦೬ - ವೆಸ್ಟ್ ಇಂಡೀಸಿನ ಕರ್ಟ್ನಿ ವಾಲ್ಷ್ ಅವರ ೫೨೦ ವಿಕೆಟುಗಳ ಗುರಿ ದಾಟಿದ ಕುಂಬ್ಳೆ. ಅತಿಹೆಚ್ಚು ವಿಕೆಟ್ ಪಡೆದ ವಿಶ್ವದ ಬೌಲರ್‍ಗಳ ಪಟ್ಟಿಯಲ್ಲಿ ನಾಲ್ಕನೆ ಸ್ಥಾನಕ್ಕೆ ಮುನ್ನಡೆ. ೩೦೦ ಟೆಸ್ಟ್ ವಿಕೆಟ್ ಪಡೆದ ಭಾರತದ ಮೊದಲ ಸ್ಪಿನ್ನರ್. ವಿಶ್ವದಲ್ಲೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪೈಕಿ ಮೂರನೆಯವರು. ( ೫೬೬ ವಿಕೆಟ್). ಫೆಬ್ರುವರೀ ೧೯೯೯ರಲ್ಲಿ ಪಾಕಿಸ್ತಾನದ ವಿರುದ್ದ ದೆಹಲಿಯಲ್ಲಿ ಒಂದು ಇನ್ನಿಂಗ್ಸ್ ನಲ್ಲಿ ೧೦ ವಿಕೆಟ್. ಜುಂಬೋ (Jumbo) ಅನಿಲ್ ಕುಂಬ್ಳೆ ಜುಂಬೋ("Jumbo") ಎಂಬ ಅಡ್ಡಹೆಸರನ್ನು ಪಡೆದಿದ್ದಾರೆ. ಸ್ಪಿನ್ ಬೌಲಿಂಗ್ ಮಾಡಿಯೂ, ಸಾಮಾನ್ಯ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಬೌಲ್ ಮಾಡುವುದನ್ನು ಕರಗತ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅದನ್ನು ಜುಂಬೋ ಜೆಟ್ ಗೆ ಹೋಲಿಸಿ, ಇವರನ್ನು ಜುಂಬೋ ಎಂದು ಕರೆಯಲಾಗುತ್ತದೆ. ಇದಲ್ಲದೇ, ಇವರ ಪಾದದ ಗಾತ್ರ ತುಂಬಾ ದೊಡ್ಡದಿರುವುದರಿಂದ ಅವರ ಟೀಂ ಮೇಟ್ ಗಳು ಈ ಹೆಸರನ್ನು ಇಟ್ಟಿದ್ದಾರೆ ಎಂದೂ ಹೇಳಲಾಗುತ್ತದೆ.!! ಪ್ರಶಸ್ತಿ ಪುರಸ್ಕಾರಗಳು ೧೯೯೬ - ವಿಸ್ಡನ್ ವರ್ಷದ ಕ್ರಿಕೆಟಿಗ ಪ್ರಶಸ್ತಿ ೨೦೦೫ - ಭಾರತ ಸರಕಾರದಿಂದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ. ಕರ್ನಾಟಕ ಸರಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಕ್ರಿಕೆಟ್ ಆಟಗಾರ ಕ್ರಿಕೆಟ್ ಭಾರತದ ಕ್ರಿಕೆಟ್ ಕ್ರೀಡಾಪಟುಗಳು
973
https://kn.wikipedia.org/wiki/%E0%B2%9A%E0%B3%86%E0%B2%A8%E0%B3%8D%E0%B2%A8%E0%B3%88
ಚೆನ್ನೈ
"ಮದ್ರಾಸ್" ಇಲ್ಲಿಗೆ ಪುನರ್ನಿರ್ದೇಶಿಸುತ್ತದೆ. ಇತರ ಬಳಕೆಗಳಿಗಾಗಿ, ಮದ್ರಾಸ್ (ದ್ವಂದ್ವ ನಿವಾರಣೆ) ನೋಡಿ. ಚೆನ್ನೈ ಬಂದರು ಚೆನ್ನೈ - ತಮಿಳುನಾಡಿನ ರಾಜಧಾನಿ. ಸಮುದ್ರ ತಟದಲ್ಲಿರುವ ಈ ಊರನ್ನು 'ಮದರಾಸು' ಎಂದು ಕರೆಯಲಾಗುತ್ತಿತ್ತು. ಬ್ರಿಟಿಷರಿಂದ ಬಂದ ಈ ಹೆಸರನ್ನು ತಮಿಳುನಾಡು ಸರ್ಕಾರ ಚೆನ್ನೈ ಎಂದು ಬದಲಾಯಿಸಿತು. ಚೆನೈ ಉಚ್ಚಾರಣೆ (· ಬಗ್ಗೆ?) (), ಹಿಂದೆ ಮದ್ರಾಸ್ ಉಚ್ಚಾರಣೆ ಎಂದು ತಮಿಳುನಾಡು ರಾಜ್ಯದ ರಾಜಧಾನಿ ಮತ್ತು ಭಾರತದ ದೊಡ್ಡ ನಾಲ್ಕನೇ ಮೆಟ್ರೋಪಾಲಿಟನ್ ನಗರ (· ಬಗ್ಗೆ?). ಬಂಗಾಳ ಕೊಲ್ಲಿಯ ಕೋರಮಂಡಲ್ ತೀರದಲ್ಲಿ ಇದೆ. ಇ ನಗರದ ಅಂದಾಜು ಜನಸಂಋಯ 7.60 ರಂತೆ ಮಿಲಿಯನ್ (2006), ಸುಮಾರು 368 ವರ್ಷಗಳ ಇತಿಹಾಸವಿರುವ ಈ ನಗರ ಜಗತ್ತಿನ ಆತಿ ದೊಡ್ಡ ನಗರಳ ಪಟ್ಟಿಯಲ್ಲಿ 36 ನೆ ಸ್ಥಾನದಲ್ಲಿದೆ. ಈ ನಗರವು ಒಂದು ದೊಡ್ಡ ವಾಣಿಜ್ಯ ಮತ್ತು ಉದ್ಯಮ ಕೇಂದ್ರವಾಗಿದ್ದು ತನ್ನ ಸಾಂಸ್ಕೃತಿಕ ಪರಂಪರೆ ಮತ್ತು ದೇಗುಲ ಶಿಲ್ಪಕಲೆಗಳಿಂದಾಗಿ ಸುಪ್ರಸಿದ್ಧವಾಗಿದೆ. ಚೆನ್ನೈ ಭಾರತದ ಎರಡನೇ (ಪುಣೆ ಮೊದಲನೆಯದು) ವಾಹನ ರಾಜಧಾನಿಯಾಗಿದ್ದು, ವಾಹನೋದ್ಯಮದ ಹೆಚ್ಚುಭಾಗ ಅಲ್ಲಿ ನೆಲೆಸಿ, ದೇಶದ ಹೆಚ್ಚಂಶ ವಾಹನಗಳು ಅಲ್ಲಿಯೇ ತಯಾರಾಗುತ್ತವೆ. ಚೆನ್ನೈ ಅನ್ನು ದಕ್ಷಿಣ ಏಶಿಯಾದ ಡೆಟ್ರಾಯಿಟ್ ಎಂದು ಕರೆಸಿಕೊಳ್ಳುತ್ತದೆ. ಅದು ಪಾಶ್ಚಿಮಾತ್ಯ ಜಗತ್ತಿನಿಂದ ಹೊರಗುತ್ತಿಗೆಯಾದ ನೌಕರಿಗಳ ಪ್ರಮುಖ ಕೇಂದ್ರವೂ ಆಗಿದೆ. ಹನ್ನೆರಡು ಕಿಲೋಮೀಟರ್ ಉದ್ದದ ಮರೀನಾ ಬೀಚ್ ನಗರದ ಪೂರ್ವ ತೀರವಾಗಿದ್ದು, ಜಗತ್ತಿನ ಅತ್ಯಂತ ಉದ್ದವಾದ ಸಮುದ್ರಂಡೆಗಳಲ್ಲೊಂದಾಗಿದೆ. ಈ ನಗರವು ತನ್ನ ಕ್ರೀಡಾ ತಾಣಗಳಿಗಾಗಿ ಹೆಸರುವಾಸಿಯಾಗಿದ್ದು ಭಾರತದ ಏಕೈಕ ATP ಟೆನ್ನಿಸ್ ಮುಕ್ತ ಚೆನ್ನೈ ಸ್ಪರ್ಧಾಕೂಟವನ್ನು ಏರ್ಪಡಿಸುತ್ತದೆ. ಪರಿವಿಡಿ [ಅಡಗಿಸು] 1 ಹೆಸರು 2 ಇತಿಹಾಸ 3 ಭೂಗೋಳ 3.1 ಹವಾಗುಣ 3.2 ರೂಪುರೇಷೆ (ಲೇಔಟ್) 4 ಆಡಳಿತ 5 ಅರ್ಥವ್ಯವಸ್ಥೆ (ಆರ್ಥಿಕತೆ) 6 ಜನಸಂಖ್ಯೆ (ಜನಸಂಖ್ಯಾಶಾಸ್ತ್ರ) 7 ಸಂಸ್ಕೃತಿ 8 ಸಾರಿಗೆ ಸಂಪರ್ಕ (ಸಾರಿಗೆ) 9 ಮಾಧ್ಯಮ (ಮಾಧ್ಯಮ) 10 ಉಪಯುಕ್ತ ಸೇವೆಗಳು (ಯುಟಿಲಿಟಿ ಸರ್ವೀಸಸ್) 11 ಶಿಕ್ಷಣ 12 ಕ್ರೀಡೆಗಳು 13 ಉಲ್ಲೇಖಗಳು 14 ಬಾಹ್ಯ ಸಂಪರ್ಕಗಳು [ಬದಲಾಯಿಸಿ] ಹೆಸರು 'ಮದ್ರಾಸು' ಎಂಬ ಹೆಸರು 'ಮದ್ರಾಸುಪಟ್ನಂ' ಪದದಿಂದ ಬಂದಿದೆ, ಈ ಜಾಗವನ್ನು ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿ ಖಾಯಂ ನೆಲೆಗಾಗಿ 1639 ರಲ್ಲಿ ಆಯ್ಕೆ ಮಾಡಿಕೊಂಡಿತು.https://www.mapsofindia.com/on-this-day/22nd-august-1639-madras-now-chennai-is-founded-by-the-east-india-company ಮದ್ರಾಸು ನಗರದ ದಕ್ಷಿಣ ಭಾಗದಲ್ಲಿ 'ಚೆನ್ನಪಟ್ಟಣಂ' ಎಂಬ ಚಿಕ್ಕ ಪೇಟೆಯಿದೆ. ಕಾಲಾಂತರದಲ್ಲಿ ಎರಡೂ ಪಟ್ಟಣಗಳೂ ಸೇರಿ 'ಮದರಾಸು' ಬ್ರಿಟೀಷರ ಕೃಪೆಗೆ ಪಾತ್ರವಾಯಿತು. ಆದರೆ ಅಲ್ಲಿನ ಜನ ಅದನ್ನು 'ಚೆನ್ನಪಟ್ಟಣ' ಅಥವಾ 'ಚೆನ್ನಪುರಿ' ಎಂದೇ ಗುರುತಿಸುತ್ತಿದ್ದರು. 'ಚೆನ್ನು' ಎಂಬ ಪದ ತೆಲುಗು ಮೂಲದ ದಕ್ಷಿಣ ಮಧ್ಯ ದ್ರಾವಿಡ ಭಾಷೆಯ ಪದ ಇದರ ಅರ್ಥ "ಸುಂದರ" ಎಂದು ಹಾಗಾಗಿ 'ಚೆನ್ನಪುರಿ' ಅಥವಾ 'ಚೆನ್ನಪಟ್ಟಣಂ' ಎಂದರೆ "ಸುಂದರ ನಗರ" ಎಂದರ್ಥ. ಈ ನಗರವನ್ನು 1996 ಆಗಸ್ಟ್ ತಿಂಗಳಲ್ಲಿ 'ಚೆನ್ನೈ' ಎಂದು ಮರುಹೆಸರಿಸಲಾಯಿತು. 'ಮದ್ರಾಸು' ಎಂಬ ಪದ ಪೋರ್ಚುಗೀಸ್ ಮೂಲದ್ದು. (ಭಾರತದ ಅನೇಕ ಇತರ ನಗರಗಳು ಕೂಡ ಅಂಥದೇ ಹೆಸರು ಬದಲಾವಣೆಗಳನ್ನು ಮಾಡಿವೆ.) ಮೂಲ ಪೋರ್ತುಗೀಸ್ ಹೆಸರು ಮಾದ್ರ ದೆ ಸಾಯ್ಸ್ -1500 ರ ಅರಂಭಿಕ ವಸತಿಗಾರರಲ್ಲೊಬ್ಬ ಉನ್ನತ ಅಧಿಕಾರಿಯ ಹೆಸರು ಎಂದು ನಂಬಲಾಗಿದೆ. ಚೆನ್ನೈ ತಮಿಳು ಹೆಸರಾಗಿರಲಿಕ್ಕಿಲ್ಲ ಎಂದೂ ಮದ್ರಾಸ್ ಎಂಬುದು ತಮಿಳುಮೂಲದ್ದಾಗಿರಬಹುದೆಂದೂ ಕೆಲವರು ಹೇಳಿದ್ದಾರೆ. [ಬದಲಾಯಿಸಿ] ಇತಿಹಾಸ 7 ನೇ ಶತಮಾನದಲ್ಲಿ ಪಲ್ಲವ ರಾಜರಿಂದ ಕಟ್ಟಲ್ಪಟ್ಟ ಮೈಲಾಪುರದಲ್ಲಿರುವ ಕಪಾಲೀಶ್ವರ ದೇವಸ್ಥಾನ . ಮುಖ್ಯ ಲೇಖನ: ಚೆನೈ ಇತಿಹಾಸ ಚೆನ್ನೈ ಸುತ್ತಲಿನ ಪ್ರದೇಶವೂ ಒಂದನೇ ಶತಮಾನದಷ್ಟು ಹಿಂದಿನ ಕಾಲದಿಂದಲೂ ಪ್ರಮುಖ ಆಡಳಿತ, ಸೈನ್ಯ ಮತ್ತು ಆರ್ಥಿಕ ಕೇಂದವಾಗಿದೆ. ಅದನ್ನು ದಕ್ಷಿಣ ಭಾರತದ ಸಾಮ್ರಾಜ್ಯಗಳು, ಪ್ರಮುಖವಾಗಿ ಪಲ್ಲವ, ಚೋಳ, ಪಾಂಡ್ಯ, ಮತ್ತು ವಿಜಯನಗರ ಸಾಮ್ರಾಜ್ಯಗಳು ಆಳಿವೆ. ಇಂದಿನ ಮಹಾನಗರದ ಭಾಗವಾಗಿರುವ ಮೈಲಾಪುರ ಪಟ್ಟಣವು ಒಂದು ಕಾಲಕ್ಕೆ, ಪಲ್ಲವ ಸಾಮ್ರಾಜ್ಯದ ಮುಖ್ಯ ಬಂದರು ಆಗಿತ್ತು. 1522 ರಲ್ಲಿ ಪೋರ್ತುಗೀಸ್ರು ಬಂದು ಕೋಟೆಯನ್ನು ಕಟ್ಟಿ, ಕ್ರಿ. ಶ 52 ರಿಂದ 70 ರಲ್ಲಿ ಇಲ್ಲಿನ ಕ್ರಿಸ್ತ ಧರ್ಮ ಪ್ರಚಾರಕನಾಗಿದ್ದ ಸಂತ ಥಾಮಸರ ಹೆಸರಿನಲ್ಲಿ ಸಾವೋ ಟೋಮ್ (ಸಾವೊ ಟೋಮ್) ಎಂದು ಕರೆದರು. ಪೋರ್ತುಗೀಸರು ಈ ಪ್ರದೇಶವನ್ನು ಡಚ್ಚ್ರ ವಶಕ್ಕೆ ನೀಡಿದ ನಂತರ ಡಚ್ಚ್ರು 1612 ರಲ್ಲಿ ಚೆನ್ನೈನ ಉತ್ತರದಲ್ಲಿರುವ ಪುಲಿಕಾಟ್ ನಲ್ಲಿ ತಮ್ಮ ವಸಾಹತುವನ್ನು ನಿರ್ಮಿಸಿಕೊಂಡರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಶಾಶ್ವತ ವಸಾಹತು ನಿರ್ಮಾಣಕಾಗಿ, ವಂದವಾಸಿಯ ನಾಯಕರಾಗಿದ್ದ ದಮೆರ್ಲ ವೆಂಕಟಾದ್ರಿಯವರು 22 ನೇ ಆಗಸ್ಟ್ 1639 ರಂದು ಈ ಪ್ರದೇಶವನ್ನು ನೀಡಿದರು. ಬ್ರಿಟಿಷರು ಈ ಪ್ರದೇಶವನ್ನು ಮದ್ರಾಸೆಮನ್ ಎಂದು ಕರೆದರು. ಇದಾದ ಒಂದು ವರ್ಷದಲ್ಲಿ ಸಂತ ಜಾರ್ಜ್ ಕೋಟೆಯನ್ನು ಕಟ್ಟಲಾಯಿತು ಮತ್ತು ಈ ನಗರವು ಎಲ್ಲಾ ಚಟುವಟಿಕೆಗಳ ಹಾಗೂ ವಾಣಿಜ್ಯಕೇಂದ್ರವಾಗಿ ಬೆಳೆಯಿತು. ಇದು ಇಂದಿಗೂ ತಮಿಳುನಾಡಿನ ವಿಧಾನ ಸಭೆ ಹಾಗೂ ಆಡಳಿತದ ಕೇಂದ್ರವಾಗಿದೆ. ಈ ಕೋಟೆಯನ್ನೂ ಹಾಗೂ ಸುತ್ತಲಿನ ಅನೇಕ ಹಳ್ಳಿಗಳನ್ನು ಫ್ರೆಂಚರ ಮಾಲ್ಡೀವ್ಸ್ ನ ಪ್ರಾಂತ್ಯಾಧಿಪತಿಯಾಗಿದ್ದ ಲಾ ಬೋರ್ದೊನ್ನೇಸ್ 1746 ರಲ್ಲಿ ವಶಪಡಿಸಿಕೊಂಡನು. ಏಕ್ಸ್-la-ಚಾಪೆಲೆ ಒಡಂಬಡಿಕೆಯ ಮೂಲಕ ಮತ್ತು ಅನಂತರ ಫ್ರೆಂಚ್ ಮತ್ತು ಹೈದರ್ ಅಲಿ, ಮೈಸೂರು ಸುಲ್ತಾನ್ ಇನ್ನಷ್ಟು ದಾಳಿ ತಡೆದುಕೊಳ್ಳುವ ಬೇಸ್ ಬಲಗೊಳ್ಳುತ್ತದೆ 1749 ರಲ್ಲಿ ಪಟ್ಟಣದ ಬ್ರಿಟಿಷ್ ನಿಯಂತ್ರಣವನ್ನು ಮರಳಿ ಪಡೆದರು. 18 ನೇ ಶತಮಾನದ ಕೊನೆಯಲ್ಲಿ, ಬ್ರಿಟಿಷ್ ಅದರ ರಾಜಧಾನಿ ಮದ್ರಾಸ್ ಎಂದು ಮದ್ರಾಸ್ ಪ್ರೆಸಿಡೆನ್ಸಿ, ಸ್ಥಾಪಿಸಲು ತಮಿಳುನಾಡು ಮತ್ತು ಆಂಧ್ರ ಪ್ರದೇಶ ಮತ್ತು ಕರ್ನಾಟಕ ಉತ್ತರ ಆಧುನಿಕ ರಾಜ್ಯಗಳ ಸುತ್ತಮುತ್ತಲಿನ ಪ್ರದೇಶದ ಅತ್ಯಂತ ವಶಪಡಿಸಿಕೊಂಡ. ಬ್ರಿಟಿಶರ ಆಳ್ವಿಕೆಯ ಅವಧಿಯಲ್ಲಿ ಪಟ್ಟಣವು ಒಂದು ಪ್ರಮುಖ ನಾಗರಿಕ ಕೇಂದ್ರವಾಗಿಯೂ ನೌಕಾನೆಲೆಯಾಗಿಯೂ ಬೆಳೆಯಿತು. 19 ನೇ ಶತಮಾನದ ಕೊನೆಗೆ ಭಾರತದಲ್ಲಿ ರೈಲು ಆಗಮನದೊಂದಿಗೆ, ಅದು ಮೊದಲು ಬಾಂಬೇ ಎಂಬ ಹೆಸರಿನಲ್ಲಿ ಪ್ರಖ್ಯಾತವಾದ ಮುಂಬಯಿ ಮತ್ತು ಕೊಲ್ಕತ್ತ (ಹಿಂದಿನ ಕಲ್ಕತ್ತಾ) ದಂತಹ, ಇತರ ಪ್ರಮುಖ ಪಟ್ಟಣಗಳೊಂದಿಗೆ ಸಂಪರ್ಕ ಪಡೆಯಿತು. ಒಳನಾಡಿನ ಸಂವಹನ ಮತ್ತು ವ್ಯಾಪಾರಕ್ಕೆ. ಇದು ತೈಲ DEPOT ಜರ್ಮನ್ ಹಗುರ ವಾಹನ SMS Emden ಅದಕ್ಕೆ ಚಿಪ್ಪುಳ್ಳ ನಂತರ ವಿಶ್ವ ಸಮರ I ರ ಸಮಯದಲ್ಲಿ ಕೇಂದ್ರ ಶಕ್ತಿಗಳು ದಾಳಿ ಏಕೈಕ ಭಾರತೀಯ ನಗರವಾಗಿದೆ. 1947 ರ ಸ್ವಾತಂತ್ರ್ಯದ ನಂತರ, ನಗರವು 1969 ರಲ್ಲಿ ತಮಿಳುನಾಡು ಎಂಬುದಾಗಿ ಮರುನಾಮಕರಣಗೊಂಡಿತು ಮದ್ರಾಸ್ ರಾಜ್ಯದ ರಾಜಧಾನಿಯಾಯಿತು. 1965 ರಿಂದ 1967, ಚೆನ್ನೈಯು ಹಿಂದಿ ಹೇರಿಕೆಯ ವಿರುದ್ಧದ ತಮಿಳು ಜನರ ಪ್ರತಿಭಟನೆಯ ಪ್ರಮುಖ ನೆಲೆಯಾಗಿತ್ತು. ಚೆನೈ ಶ್ರೀಲಂಕಾ, 1984 ರಲ್ಲಿ ಜನಾಂಗೀಯ ಸಂಘರ್ಷಕ್ಕೆ ಕಾರಣ ಕೆಲವು ರಾಜಕೀಯ ಹಿಂಸಾಚಾರ ಸಾಕ್ಷಿಯಾಗಿರಲಿಲ್ಲ ರಲ್ಲಿ ವಿಮಾನ ನಿಲ್ದಾಣದಲ್ಲಿ ತಮಿಳು ಈಳಂ ಸೈನ್ಯವು ಇಟ್ಟ ಬಾಂಬ್ನಿಂದಾಗಿ 33 ಜನರ ಸಾವು, 1991 ರಲ್ಲಿ ಶ್ರೀಲಂಕಾದ ಪ್ರತ್ಯೇಕತಾವಾದಿ ಗುಂಪು EPRLF ದ 13 ಸದಸ್ಯರು ಮತ್ತು ಇಬ್ಬರು ಭಾರತೀಯ ನಾಗರಿಕರ, ಎದುರಾಳಿ ಎಲ್ಟಿಟಿಇ ಇಂದ ಹತ್ಯೆಗಳಂತಹ ರಾಜಕೀಯ ಹಿಂಸಾಚಾರವನ್ನು ಶ್ರೀ ಲಂಕಾದಲ್ಲಿ ಜನಾಗೀಯ ಸಮಸ್ಯೆಯಿಂದಾಗಿ ಚೆನ್ನೈ ನಗರವು ಕಂಡಿತು. . ಕಠೋರ ಕ್ರಮಗಳನ್ನು ಕೈಗೋಂಡಿದ್ದರಿಂದಾಗಿ, ನಗರವು ಆ ನಂತರ ಯಾವುದೇ ಪ್ರಮುಖ ಭಯೋತ್ಪಾದಕ ಕೃತ್ಯಗಳನ್ನು ಕಂಡಿಲ್ಲ. ಹೆಸರನ್ನು ಮದ್ರಾಸ್ ಪೋರ್ಚುಗೀಸ್ ಮೂಲದ ಎಂದು ಅರ್ಥ ಎಂದು ನಗರದ ಆಗಸ್ಟ್ 1996 ರಲ್ಲಿ ಚೆನೈ ಮರುನಾಮಕರಣ ಮಾಡಲಾಯಿತು. 2004 ರಲ್ಲಿ ಶ್ರೀಲಂಕಾದಲ್ಲಿ ಹಲವಾರು ಕೊಂದು ಶಾಶ್ವತವಾಗಿ ಕರಾವಳಿ ಪರಿವರ್ತಿಸುವ, ಚೆನೈ ತೀರದಲ್ಲಿ ವರ್ಣಿಸಿದರು. [ಬದಲಾಯಿಸಿ] ಭೂಗೋಳ ಚೆನೈ ಈ ಲ್ಯಾಂಡ್ಸ್ಯಾಟ್ 7 ನಕ್ಷೆಯಲ್ಲಿ ಕಾಣಬಹುದು, ಒಂದು ಫ್ಲಾಟ್ ಕರಾವಳಿ ಮೈದಾನದ ಮೇಲೆ ನೆಲೆಗೊಂಡಿದೆ. ಚೆನೈ ಮತ್ತು ಸುತ್ತಮುತ್ತಲಿನ ಪಟ್ಟಣಗಳು ಚೆನೈ ಭಾರತದ ಆಗ್ನೇಯ ಕರಾವಳಿ ಮತ್ತು ತಮಿಳುನಾಡು ಈಶಾನ್ಯ ಮೂಲೆಯಲ್ಲಿ 13,04 ° ಎನ್ 80,17 ° ಇ ನಲ್ಲಿ ಇದೆ.https://www.chennai.org.uk/travel-tips/location.html ಇದು ಪೂರ್ವ ಕರಾವಳಿ ಬಯಲು ಎಂಬ ಫ್ಲಾಟ್ ಕರಾವಳಿ ಮೈದಾನದ ಮೇಲೆ ಇದೆ. ನಗರದ 6 ಮೀಟರ್ (20 ಅಡಿ), 60 ಮೀ (200 ಅಡಿ) ಅದರ ಅತ್ಯುನ್ನತ ಬಿಂದುವಿನ ಸರಾಸರಿ ಎತ್ತರದಲ್ಲಿದೆ. ಚೆನೈ, ಕೇಂದ್ರ ಪ್ರದೇಶದಲ್ಲಿ Cooum (ಅಥವಾ Koovam) ಮತ್ತು ದಕ್ಷಿಣ ಪ್ರದೇಶದಲ್ಲಿ ಅದ್ಯಾರ್ ಮೂಲಕ ಎರಡು ನದಿಗಳು ಸುತ್ತಾಡು. ಎರಡೂ ನದಿಗಳು ದೇಶೀಯ ಮತ್ತು ವಾಣಿಜ್ಯ ಮೂಲಗಳಿಂದ ಎಫ್ಲುಯೆಂಟ್ಸ್ ಮತ್ತು ಕಸವು ಅತೀವವಾಗಿ ಕಲುಷಿತ ಇವೆ. Cooum ಕಡಿಮೆ ಕಲುಷಿತ ಇದು ಅದ್ಯಾರ್, ಡಿ-silted ಮತ್ತು ರಾಜ್ಯ ಸರ್ಕಾರದಿಂದ ನಿಯತಕಾಲಿಕವಾಗಿ ಸ್ವಚ್ಛಗೊಳಿಸಲಾಗುತ್ತದೆ. ಅದ್ಯಾರ್ ಒಂದು ಸಂರಕ್ಷಿತ ನದೀಮುಖ ಪಕ್ಷಿಗಳು ಮತ್ತು ಪ್ರಾಣಿಗಳ ಹಲವಾರು ಜಾತಿಗಳ ನೈಸರ್ಗಿಕ ವಾಸಸ್ಥಾನ ರೂಪಿಸುತ್ತದೆ. ಬಕಿಂಗ್ಹ್ಯಾಮ್ ಕಾಲುವೆ, ಒಳನಾಡಿನ 4 ಕಿಮೀ (3 ಮೈಲಿ), ಎರಡು ನದಿಗಳ ಲಿಂಕ್ ತೀರಕ್ಕೆ ಸಮಾನಾಂತರವಾಗಿ ಸಾಗುತ್ತದೆ. Otteri ತೊರೆ, ಒಂದು ಈಶಾನ್ಯ ಸ್ಟ್ರೀಮ್ ಉತ್ತರ ಚೆನೈ ಹಾದು ಮತ್ತು ಬೇಸಿನ್ ಬ್ರಿಡ್ಜ್ ಬಕಿಂಗ್ಹ್ಯಾಮ್ ಕಾಲುವೆ ಭೇಟಿಯಾಗುತ್ತದೆ. ಗಾತ್ರ ಬದಲಾಗುವ ಅನೇಕ ಸರೋವರಗಳು ನಗರದ ಪಶ್ಚಿಮ ಭಾಗದ ಅಂಚಿನ ಮೇಲೆ ಇವೆ. ರೆಡ್ ಹಿಲ್ಸ್, Sholavaram ಮತ್ತು ಕುಡಿಯುವ ನೀರು Chembarambakkam ಲೇಕ್ ಪೂರೈಕೆ ಚೆನೈ. ಅಂತರ್ಜಲ ಮೂಲಗಳು ಹೆಚ್ಚಾಗಿ ಚೌಳಾದ ಇವೆ. ನಗರದ ನೀರು ಸರಬರಾಜು ಅದರ ಜನಸಂಖ್ಯೆಯು ಅಸಮರ್ಪಕ ಸಾಬೀತಾಗಿದೆ, ಮತ್ತು ನೀರಿನ ಜಲಾಶಯಗಳು ಮತ್ತೆ ವಾರ್ಷಿಕ ಮಾನ್ಸೂನ್ ಮೇಲೆ ಹೆಚ್ಚು ಅವಲಂಬನೆ ಸಮಸ್ಯೆಗಳನ್ನು ಜಟಿಲಗೊಳಿಸಿತು. ಉದಾಹರಣೆಗೆ Veeranam ಇತರ ಮೂಲಗಳು, ತಮಿಳುನಾಡಿನ ನೀರಿನ ಭರಿತ ಸ್ಥಳದಿಂದ ಅಥವಾ ಆಂಧ್ರ ಪ್ರದೇಶದಲ್ಲಿ ಕೃಷ್ಣಾ ನದಿಯ ನೀರನ್ನು ಕೆಲವು ಪ್ರಯತ್ನಗಳು ಪೈಪ್ ಗೆ ಇರಲಿಲ್ಲ. ವಾಟರ್ ಚೆನೈ ಒಂದು ಅಮೂಲ್ಯ ಸರಕು ಮತ್ತು ಈ ಹಲವಾರು ಪ್ರದೇಶಗಳು ಸರಬರಾಜು ಖಾಸಗಿ ನೀರಿನ ಟ್ಯಾಂಕರ್ ಹೆಚ್ಚಾಗಿದೆ. ಉದಾಹರಣೆಗೆ ಹಿಮ್ಮೊಗ ಆಸ್ಮೋಸಿಸ್ ಮತ್ತು ಮಳೆನೀರು ಕೊಯ್ಲು ಪರ್ಯಾಯ ಕ್ರಮಗಳನ್ನು ಅಪ್ ನಡೆಸಲಾಯಿತು. ಚೆನೈ Metrowater ಪ್ರಸ್ತುತ ದಿನಕ್ಕೆ 100 ದಶಲಕ್ಷ ಲೀಟರ್ (ಪ್ರತಿ ವ್ಯಕ್ತಿಗೆ ಪ್ರತಿ ದಿನ ಸುಮಾರು 15 ಲೀಟರ್) ಸಾಮರ್ಥ್ಯದ ಒಂದು ಹಿಮ್ಮೊಗ ಆಸ್ಮೋಸಿಸ್ ಸಸ್ಯ ನಿರ್ಮಿಸಲು ಬಿಡ್ ಅಂತಿಮಗೊಳಿಸಿತು. ಚೆನೈ ಭೂವಿಜ್ಞಾನ ಹೆಚ್ಚಾಗಿ ಮಣ್ಣಿನ, ಜೇಡಿ ಮತ್ತು ಮರಳುಗಲ್ಲಿನಿಂದ ಒಳಗೊಂಡಿದೆ. ನಗರದ ಭೂವಿಜ್ಞಾನ, ಮರಳು ಪ್ರದೇಶಗಳಲ್ಲಿ, clayey ಪ್ರದೇಶಗಳಲ್ಲಿ ಮತ್ತು ಹಾರ್ಡ್ ರಾಕ್ ಪ್ರದೇಶಗಳ ಆಧಾರದ ಮೇಲೆ ಮೂರು ವಲಯಗಳಾಗಿ ವಿಂಗಡಿಸಲಾಗಿದೆ. ಸ್ಯಾಂಡಿ ಪ್ರದೇಶಗಳು ನದಿಯ ಮತ್ತು ತೀರಪ್ರದೇಶಗಳ ಉದ್ದಕ್ಕೂ ಕಂಡುಬರುತ್ತದೆ. Clayey ಪ್ರದೇಶಗಳಲ್ಲಿ ನಗರದ ಅತ್ಯಂತ ರಕ್ಷಣೆ. ಹಾರ್ಡ್ ರಾಕ್ ಪ್ರದೇಶಗಳಲ್ಲಿ ಗಿಂಡಿ, ವೇಲಾಚೇರಿ, ಆಡಮ್ ಬಕ್ಕಾಮ್ ಮತ್ತು ಸೈದಾಪೇಟ್ ಒಂದು ಭಾಗವಾಗಿದೆ. ಉದಾಹರಣೆಗೆ Tiruvanmiyur, ಅದ್ಯಾರ್, Kottivakkam, Santhome, ಜಾರ್ಜ್ ಟೌನ್ ಮತ್ತು ಕರಾವಳಿ ಚೆನೈ, ಮಳೆನೀರು ರನ್ ಆಫ್ ಉಳಿದ ಮರಳು ಪ್ರದೇಶಗಳಲ್ಲಿ ಬೇಗನೆ ಬಸಿದಂತೆ. Clayey ಮತ್ತು ಹಾರ್ಡ್ ರಾಕ್ ಪ್ರದೇಶಗಳಲ್ಲಿ, ಮಳೆನೀರು ನಿಧಾನವಾಗಿ ಬಸಿದಂತೆ, ಆದರೆ ಮುಂದೆ ಕಾಲ ಮಣ್ಣು ನಡೆಯುತ್ತದೆ. ನಗರದ clayey ಪ್ರದೇಶಗಳಲ್ಲಿ T.Nagar, ವೆಸ್ಟ್ Mambalam, ಅಣ್ಣಾ ನಗರ, Kolathur ಮತ್ತು Virugambakkam ಸೇರಿವೆ. ಇವನ್ನೂ ನೋಡಿ: ಫ್ಲೋರಾ ಮತ್ತು ಚೆನೈ ಪ್ರಾಣಿಗಳು [ಬದಲಾಯಿಸಿ] ಹವಾಗುಣ ಚೆನೈ ಉಷ್ಣ ಭೂಮಧ್ಯ ಮೇಲಿದೆ, ಮತ್ತು ಆದ್ದರಿಂದ ಋತುಮಾನದ ಉಷ್ಣಾಂಶದಲ್ಲಿ ವ್ಯತ್ಯಾಸ ಕಡಿಮೆಯಿರುತ್ತದೆ ನೋಡುತ್ತಾನೆ. ಸಮುದ್ರ ಸಾಮೀಪ್ಯ ಇದು ವರ್ಷದ ಅತ್ಯಂತ ಒಂದು ಬಿಸಿ ಮತ್ತು ಆರ್ದ್ರತೆಯ ಹವಾಮಾನವು ನೀಡುತ್ತದೆ. ಅತ್ಯಧಿಕ ತಾಪಮಾನ ಕೊನೆಯಲ್ಲಿ ಮೇ ಮತ್ತು ಜೂನ್ ಮೊದಲ ಅನುಭವ ಮತ್ತು ಸಾಮಾನ್ಯವಾಗಿ 38 ನಡುವೆ ವ್ಯತ್ಯಾಸ °C (100.4 °F) ಮತ್ತು 42 °C (107.6 °F) ಕೆಲವೊಮ್ಮೆ ಸುಮಾರು 45 ಮುಟ್ಟಿದರೆ ಆದರೂ °C ಕೆಲವು ದಿನಗಳ ಕಾಲ (113 °F). ಜನವರಿ ಸಮಯದಲ್ಲಿ ಚೆನೈ ಸರಾಸರಿ ದೈನಂದಿನ ತಾಪಮಾನ ಸುಮಾರು 24 °C (75 °F) ತಾಪಮಾನದಲ್ಲಿ ವಿರಳವಾಗಿ 18 ಕಳಗೆ ಆದರೂ °C (64 °F). ದಾಖಲಾದ ಅತಿ ಕಡಿಮೆ ತಾಪಮಾನ 15.8 °C (60.4 °F) ಮತ್ತು ಅತಿ ಹೆಚ್ಚು 44.1 °C (111.4 °F). ಸರಾಸರಿ ವಾರ್ಷಿಕ ಮಳೆ 1,300 mm (47.2 ಇಂಚುಗಳು) ಇರುತ್ತದೆ. ನಗರದ ಮಧ್ಯ ಅಕ್ಟೋಬರ್ ನಿಂದ ಮಿಡ್ ಡಿಸೆಂಬರ್, ಈಶಾನ್ಯ ಮಾನ್ಸೂನ್ ಮಾರುತಗಳು ತನ್ನ ಋತುವಾರು ಮಳೆ ಪಡೆಯುತ್ತದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತಗಳು ಕೆಲವೊಮ್ಮೆ ಸಿಟಿ ಹಿಟ್. [ಬದಲಾಯಿಸಿ] ರೂಪುರೇಷೆ (ಲೇಔಟ್) ಚೆನೈ ನಗರದ ವಿಭಾಗಗಳು. 1. ಎಗ್ಮೋರ್-Nungambakam 2. ಫೋರ್ಟ್ Tondiarpet 3. Mambalam-ಗಿಂಡಿ 4. ಮೈಲಾಪೊರೆ-ಟ್ರಿಪ್ಲಿಕೇನ್ 5. Perambur-Purasawalkkam. ಇವನ್ನೂ ನೋಡಿ: ಚೆನೈ ವಾಸ್ತುಶಿಲ್ಪ ಆಡಳಿತಾತ್ಮಕ ಉದ್ದೇಶಗಳಿಗಾಗಿ ಚೆನೈ ಐದು ತಾಲ್ಲೂಕುಗಳು ವಿಂಗಡಿಸಲಾಗಿದೆ. 1. ಎಗ್ಮೋರ್-Nungambakam, 2. ಫೋರ್ಟ್ Tondiarpet 3. Mambalam-ಗಿಂಡಿ 4. ಮೈಲಾಪೊರೆ-ಟ್ರಿಪ್ಲಿಕೇನ್ 5. Perambur-Purasawalkkam. ಚೆನೈ ಮಹಾನಗರ ಪ್ರದೇಶದ ಮೂರು ಜಿಲ್ಲೆಗಳು ಚೆನೈ ನಗರದಲ್ಲಿ ಮತ್ತು ಕಾಂಚೀಪುರಂ ಮತ್ತು ಭೂಮಿ ಜಿಲ್ಲೆಗಳನ್ನು ಒಳಗೊಂಡಿದೆ. ನಗರ ಪ್ರದೇಶದಲ್ಲಿ 174 km ² (67 ಮೈಲು ²) ಪ್ರದೇಶವನ್ನು ಒಳಗೊಂಡಿದೆ. ಮೆಟ್ರೋಪಾಲಿಟನ್ ಪ್ರದೇಶದ 1.177 km ² (455 mi ²) ವಿಸ್ತಾರವಾಗಿದೆ. ಉತ್ತರ, ಮಧ್ಯ, ದಕ್ಷಿಣ ಮತ್ತು ಪಶ್ಚಿಮ: ನಗರದ ನಾಲ್ಕು ಪ್ರಮುಖ ಭಾಗಗಳಾಗಿ ಸಂಯೋಜನೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ಉತ್ತರ ಚೆನೈ ಮುಖ್ಯವಾಗಿ ಕೈಗಾರಿಕಾ ಪ್ರದೇಶವಾಗಿದೆ. ಕೇಂದ್ರ ಚೆನೈ ನಗರದ ವಾಣಿಜ್ಯ ಹೃದಯ ಮತ್ತು ಡೌನ್ಟೌನ್ ಪ್ರದೇಶ. ದಕ್ಷಿಣ ಚೆನೈ ಮತ್ತು ವೆಸ್ಟ್ ಚೆನೈ, ಹಿಂದೆ ಪ್ರಧಾನವಾಗಿ ವಸತಿ ಪ್ರದೇಶಗಳಲ್ಲಿ ತ್ವರಿತ ಐಟಿ ಮತ್ತು ಹಣಕಾಸು ಸಂಸ್ಥೆಗಳು ಒಂದು ದೊಡ್ಡ ಸಂಖ್ಯೆಯ ಹೋಸ್ಟಿಂಗ್, ವಾಣಿಜ್ಯ ಪ್ರದೇಶಗಳಲ್ಲಿ ಮಾಡುತ್ತಿರುವಿರಿ. ಸಮೀಪದ ಉಪಗ್ರಹ ಪಟ್ಟಣಗಳು ​​ದಕ್ಷಿಣಕ್ಕೆ ಮಹಾಬಲಿಪುರಂನ, ನೈಋತ್ಯ, ಕಾಂಚೀಪುರಂ ಪಟ್ಟಣ ಶ್ರೀಪೆರಂಬದೂರಿನ, ತಿರುವಳ್ಳೂರು ಮತ್ತು ಪಶ್ಚಿಮಕ್ಕೆ ಅರಕ್ಕೋಣಮ್ ಗೆ Chengalpattu ಸೇರಿವೆ. Guduvancheri ಚೆನೈ ಒಂದು ಉಪನಗರವಾಗಿದೆ. [ಬದಲಾಯಿಸಿ] ಆಡಳಿತ ಚೆನೈ ಕಾರ್ಪೊರೇಷನ್ ಕೊಠಡಿಗಳನ್ನಾಗಿ ರಿಪನ್ ಬಿಲ್ಡಿಂಗ್, 1913 ಪೂರ್ಣಗೊಂಡಿತು. ಇದು ಮಾಜಿ ವೈಸ್ರಾಯ್ ಲಾರ್ಡ್ ರಿಪ್ಪನ್ ಹೆಸರಿಡಲಾಗಿದೆ. ಚೆನೈ ನಗರವು ಮೇಯರ್ ಮತ್ತು ಮೇಯರ್ ಮತ್ತು ಡೆಪ್ಯುಟಿ ಮೇಯರ್ ಇತರ ಸಮಿತಿ ಆಯ್ಕೆಯಾದ ಒಂದು ಇವರಲ್ಲಿ 155 ವಾರ್ಡ್ಸನ (ಎಲ್ಲಾ ನೇರವಾಗಿ ನಗರದ ನಿವಾಸಿಗಳು ಚುನಾಯಿತ), ಪ್ರತಿನಿಧಿಸುವ 155 ಸಮಿತಿ ಹೊಂದಿರುತ್ತದೆ ಚೆನೈ, ಸಂಸ್ಥೆಯು ನಿರ್ವಹಿಸುತ್ತದೆ. ಮೇಯರ್ ಮತ್ತು ಡೆಪ್ಯುಟಿ ಮೇಯರ್ 10 ಸ್ಥಾಯಿ ಸಮಿತಿಗಳ ಅಧ್ಯಕ್ಷತೆ. ಕಾರ್ಪೊರೇಷನ್ ರಾಜಧಾನಿಯ ನಾಗರಿಕ ಕಾರ್ಯಗಳು ನೋಡಿಕೊಳ್ಳುತ್ತಾರೆ. ಚೆನೈ ಮಹಾನಗರ ಪ್ರದೇಶದ ಕಾಂಚೀಪುರಂ ಮತ್ತು ಭೂಮಿ ಜಿಲ್ಲೆಗಳು ಭಾಗವಾಗಿದೆ ಅನೇಕ ಉಪನಗರಗಳು ಆವರಿಸುತ್ತದೆ. ಸಣ್ಣದಾಗಿ ಪಂಚಾಯತ್ ಎಂಬ ಪಟ್ಟಣದ ಮಂಡಳಿಗಳನ್ನು ಆಡಳಿತ ಸಂದರ್ಭದಲ್ಲಿ ದೊಡ್ಡ ಉಪನಗರಗಳಿಗೆ ಪಟ್ಟಣದ ಪುರಸಭೆಗಳನ್ನು goverened ಮಾಡಲಾಗುತ್ತದೆ. ಚೆನೈ ತಮಿಳುನಾಡು ರಾಜಧಾನಿ ಎಂದು ತಮಿಳುನಾಡು ಸರ್ಕಾರದ ಕಾರ್ಯಾಂಗ ಮತ್ತು ಶಾಸಕಾಂಗ ಪ್ರಧಾನ ನೆಲೆಯಾಗಿದೆ. ಮುಖ್ಯವಾಗಿ ಸಚಿವಾಲಯದ ಕಟ್ಟಡಗಳು, ಫೋರ್ಟ್ ಸೇಂಟ್ ಜಾರ್ಜ್ ಕ್ಯಾಂಪಸ್ ಭಾಗವಾಗಿ ಹಾಗೂ ನಗರದ ಸುತ್ತ ಅಲ್ಲಲ್ಲಿ ಅನೇಕ ಕಟ್ಟಡಗಳಲ್ಲಿ ಇರಿಸಲಾಗಿದೆ. ಇದರ ವ್ಯಾಪ್ತಿಗೆ ತಮಿಳುನಾಡು ಮತ್ತು ಪಾಂಡಿಚೇರಿ ಉದ್ದಗಲಕ್ಕೂ ಹರಡಿದೆ ಮದ್ರಾಸ್ ಹೈಕೋರ್ಟ್, ರಾಜ್ಯದ ಅತ್ಯುನ್ನತ ನ್ಯಾಯಾಂಗ ಅಧಿಕಾರವನ್ನು ಹೊಂದಿದೆ ಮತ್ತು ನಗರದಲ್ಲಿ ಇದೆ. ಚೆನೈ ಉತ್ತರ, ಮಧ್ಯ ಮತ್ತು ಚೆನೈ ಚೆನೈ ದಕ್ಷಿಣ - ಚೆನೈ ಮೂರು ಸಂಸದೀಯ ಕ್ಷೇತ್ರಗಳನ್ನು ಹೊಂದಿದೆ. ಪ್ರಸ್ತುತ ಸಂಸದರು ಕ್ರಮವಾಗಿ ಸಿ Kuppusami, ದಯಾನಿಧಿ ಮಾರನ್ ಮತ್ತು ಟಿಆರ್ Baalu ​​ಇವೆ. ಚೆನೈ ರಾಜ್ಯದ ಶಾಸನ 18 ಶಾಸಕರು ಆಯ್ಕೆ. ಗ್ರೇಟರ್ ಚೆನೈ ಪೊಲೀಸ್ ಇಲಾಖೆ, ತಮಿಳುನಾಡು ಪೊಲೀಸ್ ವಿಭಾಗದ ನಗರದಲ್ಲಿ ಕಾನೂನು ಜಾರಿ ಸಂಸ್ಥೆ ಹೊಂದಿದೆ. ನಗರ ಪೊಲೀಸ್ ಪಡೆಯ ಪೊಲೀಸ್ ಮತ್ತು ತಮಿಳುನಾಡು ಮುಖಪುಟ ಮಂತ್ರಿಮಂಡಲದ ಆಡಳಿತಾತ್ಮಕ ನಿಯಂತ್ರಣ ನಡುವಂಗಿಗಳನ್ನು ಧರಿಸುತ್ತಿದ್ದರು ಒಂದು ಆಯುಕ್ತರು ಮುಖ್ಯಸ್ಥರಾಗಿರುತ್ತಾರೆ. ಗ್ರೇಟರ್ ಚೆನೈ ಪೊಲೀಸ್ ಮೂವತ್ತಾರು ಉಪವಿಭಾಗಗಳಲ್ಲಿ, ಮತ್ತು 121 ಪೊಲೀಸ್ ನಿಲ್ದಾಣಗಳಿವೆ. ಈ ಪೊಲೀಸ್ ಕೇಂದ್ರಗಳ ಹದಿನೈದು ಈಗ ಐಎಸ್ಒ 9001:2000 ಪ್ರಮಾಣಿತ ಇವೆ. ನಗರದ ಸಂಚಾರ ಚೆನೈ ಸಿಟಿ ಸಂಚಾರ ಪೊಲೀಸ್ (CCTP) ನಿರ್ವಹಿಸುತ್ತದೆ. ಮೆಟ್ರೋಪಾಲಿಟನ್ ಉಪನಗರಗಳಲ್ಲಿ ಕಾಂಚೀಪುರಂ ಮತ್ತು ಭೂಮಿ ಪೊಲೀಸ್ ಇಲಾಖೆಗಳು ಆಟಗಳ ನಿಯಮಗಳು. [ಬದಲಾಯಿಸಿ] ಅರ್ಥವ್ಯವಸ್ಥೆ (ಆರ್ಥಿಕತೆ) Tidel ಪಾರ್ಕ್, ಚೆನೈ ಅತಿದೊಡ್ಡ ಸಾಫ್ಟ್ವೇರ್ ಪಾರ್ಕ್ ಚೆನೈ ವಿವಿಧ ಆರ್ಥಿಕ ಮೂಲವನ್ನು ಹೊಂದಿದೆ. ಮುಖ್ಯ ಕೈಗಾರಿಕೆಗಳು ವಾಹನ, ತಂತ್ರಾಂಶ ಸೇವೆಗಳು, ಹಾರ್ಡ್ವೇರ್ ಉತ್ಪಾದನಾ ಮತ್ತು ಹಣಕಾಸು ಸೇವೆಗಳು. ಇತರ ಪ್ರಮುಖ ಉದ್ಯಮಗಳು ಪೆಟ್ರೋಕೆಮಿಕಲ್ಸ್, ಜವಳಿ ಮತ್ತು apparels ಸೇರಿವೆ. ಚೆನೈ ಪೋರ್ಟ್ ಮತ್ತು ಎನ್ನೋರ್ ಪೋರ್ಟ್ ಇದರ ಪ್ರಾಮುಖ್ಯತೆಯ ಸೂಕ್ತ ಕೊಡುಗೆ. ನಗರದ ಮದ್ರಾಸ್ ಸ್ಟಾಕ್ ಎಕ್ಸ್ಚೇಂಜ್ ಎಂಬ ಸಂಪೂರ್ಣ ಗಣಕೀಕೃತ ಸ್ಟಾಕ್ ವಿನಿಮಯ ಹೊಂದಿದೆ. 1990, ಸಾಫ್ಟ್ವೇರ್ ಅಭಿವೃದ್ಧಿ ಮತ್ತು ವ್ಯಾಪಾರ ಪ್ರಕ್ರಿಯೆಯ ಹೊರಗುತ್ತಿಗೆ ಮತ್ತು ಇತ್ತೀಚೆಗೆ MANUFACTURING ನಗರದ ಆರ್ಥಿಕತೆಯಲ್ಲಿ ಪ್ರಮುಖ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಾರೆ ರಿಂದ. ಚೆನೈ ಪ್ರಕಾರ ಸಾಗರೋತ್ತರ ಸೇವೆಗಳನ್ನು ಅತ್ಯಂತ ಆಕರ್ಷಕ ಭಾರತೀಯ ನಗರ ರೇಟ್ ಮಾಡಲಾಗಿದೆ ಕೀಯರ್ನಿ ಭಾರತೀಯ ಸಿಟಿ ಸೇವೆಗಳು ಆಕರ್ಷಣೆ ಸೂಚಿಕೆ 2005. [1] ಐಟಿ ಕಾರಿಡಾರ್, ನಗರವು ಅನೇಕ ತಂತ್ರಜ್ಞಾನ ಉದ್ಯಾನಗಳು ಆಗ್ನೇಯ ಓಲ್ಡ್ ಮಹಾಬಲಿಪುರಂನ ರಸ್ತೆಯಲ್ಲಿ. ಮಹೀಂದ್ರಾ ವರ್ಲ್ಡ್ ಸಿಟಿ, ವಿಶ್ವದ ಅತಿ ದೊಡ್ಡ ಮಾಹಿತಿ ತಂತ್ರಜ್ಞಾನ ಪಾರ್ಕ್ಗಳನ್ನು ಒಬ್ಬ ವಿಶೇಷ ಆರ್ಥಿಕ ವಲಯ (SEZ), ಚೆನೈ ಹೊರವಲಯದಲ್ಲಿ ನಿರ್ಮಾಣ ಹಂತದಲ್ಲಿದೆ. ನೋಕಿಯಾ, ಮೊಟೊರೊಲಾ, ಸೀಮೆನ್ಸ್, ಫ್ಲೆಕ್ಸ್ಟ್ರಾನಿಕ್ಸ್, ಹಾಗೂ ಫಾಕ್ಸ್ಕಾನ್ಗಳು ನಂತಹ ಬಹುರಾಷ್ಟ್ರೀಯ ಅಥವಾ ಶ್ರೀಪೆರುಂಬುದೂರ್ ಉಪಗ್ರಹ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಉತ್ಪಾದನಾ SEZ ಗಳಲ್ಲಿ ಸ್ಥಾಪಿಸಲು ಪ್ರಕ್ರಿಯೆಯಲ್ಲಿವೆ. ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ 'ಆರ್ & ಡಿ ಸೌಲಭ್ಯ ಪೈಪ್ಲೈನ್ ನಡೆಸುತ್ತಿರುವಾಗ ಎರಿಕ್ಸನ್ ಮತ್ತು ಲ್ಯೂಸೆಂಟ್-ಅಲ್ಕಾಟೆಲ್ ನಗರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯ ಸೌಲಭ್ಯಗಳನ್ನು ಹೊಂದಿರುತ್ತವೆ. ನಗರದ ಎರಡು ಪ್ರಮುಖ ಜೈವಿಕ ಉದ್ಯಾನಗಳು, ಸಿರುಸೆರಿ ನಲ್ಲಿ TICEL ಜೈವಿಕ ತಂತ್ರಜ್ಞಾನ ಪಾರ್ಕ್ ಮತ್ತು ಗೋಲ್ಡನ್ ಜುಬಿಲಿ ಜೈವಿಕ ತಂತ್ರಜ್ಞಾನ ಪಾರ್ಕ್ ಮನೆಗೆ ಜೈವಿಕ ತಂತ್ರಜ್ಞಾನ ಕಂಪನಿಗಳು ಮತ್ತು ಪ್ರಯೋಗಾಲಯಗಳು ಹೊಂದಿದೆ. ಚೆನೈ ಭಾರತದ ಆಟೋ ಘಟಕಗಳನ್ನು ಉದ್ಯಮದ 45 ರಷ್ಟು ಹಾಗೂ ವಾಹನ ಉದ್ಯಮದ 27 ರಷ್ಟು ಮೂಲ ಹೊಂದಿದೆ. ಭಾರತದಲ್ಲಿ ವಾಹನ ಕಂಪನಿಗಳ ಒಂದು ದೊಡ್ಡ ಸಂಖ್ಯೆಯ ಚೆನೈ ನೆಲೆಗೊಂಡಿದೆ. BMW, ಮಹೀಂದ್ರಾ & ಮಹೀಂದ್ರಾ, ಮತ್ತು ಅಪೊಲೊ ಟೈರುಗಳು ಅಡಿಯಲ್ಲಿ ಸಸ್ಯಗಳು ಹೊಂದಿರುತ್ತವೆ ಹಾಗೆಯೇ ಹ್ಯುಂಡೈ, ಫೋರ್ಡ್, ಮಿತ್ಸುಬಿಷಿ, ಟಿವಿಎಸ್, ಅಶೋಕ್ ಲೇಲ್ಯಾಂಡ್, ಕ್ಯಾಟರ್ಪಿಲ್ಲರ್, ರಾಯಲ್ ಎನ್ಫೀಲ್ಡ್, TI ಚಕ್ರಗಳಿಗೆ TAFE, ಡನ್ಲಪ್, ಕಂಪನಿಯು ಹಲವು ಜಾಗತಿಕ ವಾಹನ ಕಂಪನಿಗಳು ಚೆನೈ ಮತ್ತು ಸುಮಾರು ಸಸ್ಯಗಳು ಉತ್ಪಾದಕ ಎಂದು ಚೆನೈ ಮತ್ತು ಸುತ್ತ ನಿರ್ಮಾಣ. ನಗರದ ಸ್ವಯಂ ಸಹಾಯಕ ಉದ್ಯಮದ ಒಂದು ಪ್ರಮುಖ ಕೇಂದ್ರವಾಗಿದೆ. ಚಿತ್ರ: Chennaihyundai.jpg ಚೆನೈ ನಗರದಲ್ಲಿ ಹ್ಯುಂಡೈ ಕಾರು ಕಾರ್ಖಾನೆಯಿಂದ ಸಾಲಿನಲ್ಲಿ ಕಾರುಗಳು ಅರ್ಜುನ್: ಹೆವಿ ವಾಹನ ಫ್ಯಾಕ್ಟರಿ, Avadi ಭಾರತದ ಪ್ರಮುಖ ಯುದ್ಧ ಟ್ಯಾಂಕ್ ಸೇರಿದಂತೆ ಮಿಲಿಟರಿ ವಾಹನಗಳು, ಉತ್ಪಾದಿಸುತ್ತದೆ. ಭಾರತೀಯ ರೈಲ್ವೆಯ ರೈಲ್ವೆ ಕೋಚ್ ನಿರ್ಮಾಣ ಫ್ಯಾಕ್ಟರಿ, ಇಂಟೆಗ್ರಲ್ ಕೋಚ್ ಫ್ಯಾಕ್ಟರಿ [1] ರೈಲ್ವೆ ತರಬೇತುದಾರರು ಮತ್ತು ಇಂಜಿನ್ಗಳನ್ನು ತಯಾರಿಸುತ್ತದೆ. ಚೆನೈ ಬ್ಯಾಂಕಿಂಗ್ ಮತ್ತು ಹಣಕಾಸು ಪ್ರಮುಖ ಕೇಂದ್ರವಾಗಿದೆ. ಪ್ರಸ್ತುತ ಮೂರು ದೊಡ್ಡ ರಾಷ್ಟ್ರೀಯ ಬ್ಯಾಂಕುಗಳು ವಾಣಿಜ್ಯ ಬ್ಯಾಂಕುಗಳ ಮತ್ತು ಅನೇಕ ರಾಜ್ಯ ಮಟ್ಟದ ಸಹಕಾರ ಬ್ಯಾಂಕ್ಗಳು ​​ನೆಲೆಯಾಗಿದೆ. ಅನೇಕ ಹಣಕಾಸು ಸಂಸ್ಥೆಗಳು ಮತ್ತು ವಿಮಾ ಕಂಪನಿಗಳು ಚೆನೈ ಕೇಂದ್ರಕಾರ್ಯಾಲಯ ಹೊಂದಿವೆ. ಅನೇಕ ಭಾರತೀಯ ಬ್ಯಾಂಕ್, ಬಹುರಾಷ್ಟ್ರೀಯ ಬ್ಯಾಂಕುಗಳು ಹಾಗೂ ವಿಶ್ವ ಬ್ಯಾಂಕ್ ನಗರದಲ್ಲಿ ತಮ್ಮ ಬ್ಯಾಕ್ ಆಫೀಸ್ ಕಾರ್ಯಾಚರಣೆಗಳು ನೆಲೆಗೊಂಡಿದೆ. ನಗರದ ಭಾರತದಲ್ಲಿ ಅನೇಕ ಬ್ಯಾಂಕುಗಳು ಮತ್ತು ಹಣಕಾಸು ಕಂಪನಿಗಳನ್ನು ಕಾರ್ಯಾಚರಣೆಗಳಿಗೆ ಕೇಂದ್ರವನ್ನು ಪ್ರಮುಖ ಮರಳಿ ಕಾರ್ಯನಿರ್ವಹಿಸುತ್ತದೆ. ಇತರ ಪ್ರಮುಖ ತಯಾರಿಕಾ ಸೌಲಭ್ಯಗಳನ್ನು ಸಣ್ಣ ಪ್ರಮಾಣದ ಉತ್ಪಾದನಾ ದೊಡ್ಡ ಪ್ರಮಾಣದ ಭಾರೀ ಕೈಗಾರಿಕಾ ಉತ್ಪಾದನಾ, pertochemicals ಮತ್ತು ಸ್ವಯಂ ಸಹಾಯಕ ಸಸ್ಯಗಳು ಹಿಡಿದು. ಚೆನೈ ನಗರದ ಉತ್ತರದ ಉಪನಗರಗಳಲ್ಲಿ Ambattur-ಪಾಡಿ ಕೈಗಾರಿಕಾ ವಲಯದಲ್ಲಿ ಇದೆ ಉಡುಪು ಕೈಗಾರಿಕೆಗಳ ಒಂದು ದೊಡ್ಡ ಸಂಖ್ಯೆಯ ಒಂದು ಜವಳಿ ಉದ್ಯಮ ಕೇಂದ್ರವಾಗಿದೆ. ನಗರವು ಒಂದು ದೊಡ್ಡ ಚರ್ಮದ ಉಡುಪು ಮತ್ತು ಪರಿಕರಗಳ ಉದ್ಯಮ ಹೊಂದಿದೆ. SEZ ನ ಉಡುಪು ತಯಾರಿಕೆ ಮತ್ತು ಪಾದರಕ್ಷೆಗಳ ನಗರವು ದಕ್ಷಿಣ ಉಪನಗರಗಳಲ್ಲಿ ನಿರ್ಮಾಣ ಹಂತದಲ್ಲಿದೆ. ನಗರದ ತಮಿಳು ಎಂಟರ್ಟೈನ್ಮೆಂಟ್ (ಚಲನಚಿತ್ರಗಳು, ದೂರದರ್ಶನ ಮತ್ತು ಮುದ್ರಿತ ಸಂಗೀತ), ಭಾರತೀಯ ಮನರಂಜನಾ ಉದ್ಯಮಗಳಲ್ಲಿ ಎರಡನೇ ಅತಿದೊಡ್ಡ ಇದು ಉದ್ಯಮ ನೆಲೆಯಾಗಿದೆ. [ಬದಲಾಯಿಸಿ] ಜನಸಂಖ್ಯೆ (ಜನಸಂಖ್ಯಾಶಾಸ್ತ್ರ) ಚೆನೈ ನಿವಾಸಿಗಳು Chennaiites ಕರೆಯಲಾಗುತ್ತದೆ. ಒಟ್ಟು ಮೆಟ್ರೊಪಾಲಿಟನ್ ಜನಸಂಖ್ಯೆಯು 6.7 ಮಿಲಿಯನ್ ಆದರೆ 2000 ರ, ಚೆನೈ ಸಿಟಿ, 4.2 ಮಿಲಿಯನ್ ಜನಸಂಖ್ಯೆಯನ್ನು ಹೊಂದಿತ್ತು. 2006 ರಲ್ಲಿ ಅಂದಾಜು ಮೆಟ್ರೊಪಾಲಿಟನ್ ಜನಸಂಖ್ಯೆಯು 7.60 ರಂತೆ ಮಿಲಿಯನ್ ಆಗಿದೆ. ಚಿತ್ರ: Chennai.ranganathanst.jpg T.Nagar ರಲ್ಲಿ ರಂಗನಾಥನ್ ಸ್ಟ್ರೀಟ್ ಸಾಮಾನ್ಯವಾಗಿ ಪಾದಚಾರಿ ವ್ಯಾಪಾರಿಗಳು ತುಂಬಿಹೋಗಿದ್ದು. ನಗರದಲ್ಲಿ ಜನಸಂಖ್ಯೆ ಸಾಂದ್ರತೆ ಪ್ರತಿ km ² ನಷ್ಟು ವಿಸ್ತೀರ್ಣ 24.418 ಒಟ್ಟಾರೆ ಜನಸಂಖ್ಯೆಯ ಸಾಂದ್ರತೆ ಪ್ರತಿ km 5.847 ಹಾಗೆಯೇ ². ಲಿಂಗ ಅನುಪಾತ 934 ರಾಷ್ಟ್ರೀಯ ಸರಾಸರಿ ಕೊಂಚ ಹೆಚ್ಚಿನ ಪ್ರತಿ 1000 ಪುರುಷರಿಗೆ ಸಂಬಂಧಿಸಿದಂತೆ 948 ಮಹಿಳೆಯರಂತೆ. ಸರಾಸರಿ ಸಾಕ್ಷರತೆಯ ಪ್ರಮಾಣವು 59.5%, ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ 80,14% ಆಗಿದೆ. ನಗರದ ಜನಸಂಖ್ಯೆಯಲ್ಲಿ 18% ರಷ್ಟು ಕೊಳಚೆ ಪರಿಸ್ಥಿತಿಗಳು ವಾಸಿಸುವ ಎಂದು ವರ್ಗೀಕರಿಸಲಾಗಿದೆ. ಚೆನೈ ಎದುರಿಸುತ್ತಿದೆ ಮುಖ್ಯ ಸಮಸ್ಯೆ ಜನಸಂಖ್ಯಾ ಮತ್ತು ಪರಿಣಾಮವಾಗಿ ನೀರಿನ ಕೊರತೆ ಇದೆ. ವಸತಿ ಗಗನಚುಂಬಿ ಸಾಮಾನ್ಯವಾಗಿ ಸಮಯ ಮತ್ತು ಖಾಸಗಿ ವಾಹನಗಳು ಮಾಲೀಕತ್ವವನ್ನು ವಾಹನದಟ್ಟಣೆ ರಲ್ಲಿ ನಂತರದ ಹೆಚ್ಚಳ, ನಗರದ ಅವ್ಯವಸ್ಥಿತ ಬೆಳವಣಿಗೆ ಕಾರಣವಾಗುತ್ತದೆ ಒಲವು ಇಲ್ಲ. ಹೆಚ್ಚಿನ ಜಮೀನು ಬೆಲೆಗಳು ಮತ್ತು ಸ್ಥಳಾವಕಾಶದ ಕೊರತೆ ಕಳಪೆ ನಿರ್ಮಲೀಕರಣ ಮತ್ತು ಶುದ್ಧ ನೀರಿನ ಪ್ರವೇಶವನ್ನು ಕೊರತೆ ಹೊಂದಿವೆ ಇದು ಕೊಳೆಗೇರಿಗಳ, ವಾಸಿಸುತ್ತಿದ್ದವು ಆಗಿ ಸಮಾಜದ ಕೆಳ ಸ್ತರದ ಹಲವು ಸದಸ್ಯರು ಮೇಲೇರಲು ಕಾರಣವಾಗಿದೆ. ಚೆನೈ ನಗರದಲ್ಲಿ ನಿವಾಸಿಗಳು ಬಹುತೇಕ ಸ್ಥಳೀಯ ತಮಿಳರ ಮತ್ತು ತಮಿಳು ಮಾತನಾಡುತ್ತಾರೆ. ಇಂಗ್ಲೀಷ್ ವ್ಯಾಪಕವಾಗಿ ಮಾತನಾಡುತ್ತಾರೆ, ಮತ್ತು ವ್ಯಾಪಾರ, ಶಿಕ್ಷಣ ಮತ್ತು ಇತರ ಬಿಳಿ ಕಾಲರ್ ವೃತ್ತಿಗಳನ್ನು ಮಾತ್ರ ಪ್ರತ್ಯೇಕವಾಗಿ ಬಳಸಲಾಗುತ್ತದೆ. ಚೆನೈ ಮಾತನಾಡುವ ತಮಿಳು ಇದನ್ನು ಮದ್ರಾಸ್ bhashai ("ಮದ್ರಾಸ್ ಭಾಷೆ" ತಮಿಳು) ಎಂದು ಕರೆಯಲ್ಪಡುವ ಎಷ್ಟರಮಟ್ಟಿಗೆಂದರೆ, ಧಾರಾಳವಾಗಿ ಇಂಗ್ಲೀಷ್ ಪದಗಳನ್ನು ಬಳಸುತ್ತದೆ. ಗಮನಾರ್ಹ ತೆಲುಗು, ಮಲೆಯಾಳಿ, ಕನ್ನಡ ಮತ್ತು ಉರ್ದು ಭಾಷಿಕ ಸಮುದಾಯಗಳು ಇವೆ. ಬ್ರಿಟಿಷ್ ಕಾಲದಿಂದಲೂ ಒಂದು ಪ್ರಾದೇಶಿಕ ಕೇಂದ್ರವಾಗಿದೆ, ಇತರ ಪ್ರಮುಖ ಸಮುದಾಯಗಳು ಮಾರ್ವಾಡಿ, ಆಂಗ್ಲೋ ಇಂಡಿಯನ್, ಬಂಗಾಳಿ, ಪಂಜಾಬಿ, ಉತ್ತರ ಪ್ರದೇಶ ಮತ್ತು ಬಿಹಾರ ರಿಂದ ಗುಜರಾತಿ ಸಮುದಾಯಗಳು ಮತ್ತು ಜನರು ಸೇರಿವೆ. ಚೆನೈ ಸಹ ಕೈಗಾರಿಕೆಗಳಲ್ಲಿ ಕೆಲಸ ಮತ್ತು ಐಟಿ ಕೇಂದ್ರಗಳನ್ನು ಒಬ್ಬ ಬೆಳೆಯುವ ವಿದೇಶವಾಸಿ ಜನರನ್ನೂ ಹೊಂದಿದೆ. [ಬದಲಾಯಿಸಿ] ಸಂಸ್ಕೃತಿ ಮುಖ್ಯ ಲೇಖನ: ಚೆನೈ ಸಂಸ್ಕೃತಿ ಚೆನೈ ಸಂಸ್ಕೃತಿ ತನ್ನ ವೈವಿಧ್ಯಮಯ ಜನಸಂಖ್ಯೆಯನ್ನು ಪ್ರತಿಬಿಂಬಿಸುತ್ತದೆ. ನಗರವು ತನ್ನ ಶಾಸ್ತ್ರೀಯ ನೃತ್ಯ ಪ್ರದರ್ಶನಗಳು ಮತ್ತು ಹಿಂದೂ ದೇವಾಲಯಗಳಿಗೆ ಪ್ರಖ್ಯಾತವಾಗಿದೆ. ಡಿಸೆಂಬರ್ ಪ್ರತಿ, ಚೆನೈ ವಿಶ್ವದ ಅತಿದೊಡ್ಡ ಸಾಂಸ್ಕೃತಿಕ ಘಟನೆಗಳ ಒಂದು ಎಂದು ವಿವರಿಸಲಾಗಿದೆ ಐದು ವಾರದ ಸಂಗೀತ ಸೀಸನ್, ಹೊಂದಿದೆ. ಸಂಗೀತ ಸೀಸನ್ ನಗರದಲ್ಲಿ ಮತ್ತು ಸುತ್ತಮುತ್ತಲಿನ ಕಲಾವಿದರು ನೂರಾರು ಸಾಂಪ್ರದಾಯಿಕ ಕರ್ನಾಟಕ ಸಂಗೀತದ ಪ್ರದರ್ಶನಗಳನ್ನು (kutcheries) ಒಳಗೊಳ್ಳುತ್ತದೆ. ಚೆನೈ ಸಹ ತಮಿಳುನಾಡಿನ ಅಧಿಕೃತ ನೃತ್ಯ ಇದು ಶಾಸ್ತ್ರೀಯ ಭಾರತೀಯ ನೃತ್ಯ, ಭರತನಾಟ್ಯ, ಹೆಸರುವಾಸಿಯಾಗಿದೆ. ಭರತನಾಟ್ಯ ಒಂದು ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿದೆ ನಗರದ ದಕ್ಷಿಣದಲ್ಲಿ ಸಮುದ್ರತೀರದಲ್ಲಿ ಇದೆ ಕಲಾಕ್ಷೇತ್ರ ("ಕಲೆಗಳ ಸ್ಥಳ" ಸಂಸ್ಕೃತ), ಆಗಿದೆ. ಚಿತ್ರ: Bharatanatyam1.jpg ಸಾಂಪ್ರದಾಯಿಕ ಭರತನಾಟ್ಯ ಪ್ರದರ್ಶನ ಚೆನೈ ತಮಿಳು ದೊಡ್ಡ ಸಂಖ್ಯೆಯ ನಿರ್ವಹಿಸುತ್ತದೆ ಪಾತ್ರದಲ್ಲಿ, ಒಂದು ರೋಮಾಂಚಕ ನಾಟಕ ದೃಶ್ಯ ಹೊಂದಿದೆ. ಸಾಮಾನ್ಯವಾಗಿ, ತಮಿಳು ನಾಟಕ ಕೋಡಂಗಿ ಹಾಸ್ಯ ಮತ್ತು ಗಂಭೀರ ನಾಟಕಗಳನ್ನು ಮತ್ತು ಐತಿಹಾಸಿಕ ನಾಟಕಗಳು ಸೇರಿದಂತೆ ಅಲ್ಲದ ಸಭ ಆಧಾರಿತ ನಾಟಕ ಬೆಂಬಲ ರಾಜಕೀಯ ಸಮಸ್ಯೆಗಳು ಅಥವಾ ಶೈಲಿಗಳನ್ನು ಅಣಕು ಅವು ಸಭ ಆಧಾರಿತ ನಾಟಕ ವಿಂಗಡಿಸಲಾಗಿದೆ. ಇಂಗ್ಲೀಷ್ ರಂಗಭೂಮಿ ಕೂಡ ಜನಪ್ರಿಯವಾಗಿದೆ. ಶಾಲೆ ಮತ್ತು ಕಾಲೇಜು ಸಾಂಸ್ಕೃತಿಕ ಉತ್ಸವಗಳು (ಸ್ಥಳೀಯವಾಗಿ ಕರೆಯಲ್ಪಡುವ culfests) ಕಲೆ ಮತ್ತು ಸಂಸ್ಕೃತಿಯಲ್ಲಿ ಆಸೆಗಳನ್ನು ನಗರದ ಯುವಕರ ವೇದಿಕೆಗಳು ಒದಗಿಸುವ ಒಂದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಹ ಪ್ರಸ್ತುತ ಪಶ್ಚಿಮ ಮತ್ತು ಇತರ ಶೈಲಿಗಳಲ್ಲಿ ತಂಡಗಳಲ್ಲಿ ಸ್ಥಾಪಿತ ಮತ್ತು ಬೆಳೆಯುತ್ತಿರುವ ಸಂಸ್ಕೃತಿ. ಚೆನೈ ಅತ್ಯಂತ ಸ್ಟುಡಿಯೋಗಳು ಇವೆ ಅಲ್ಲಿ ಕೋಡಂಬಾಕ್ಕಂ ಪ್ರದೇಶದಲ್ಲಿ ನಂತರ ಕಾಲಿವುಡ್ ಡಬ್ ದೊಡ್ಡ ತಮಿಳು ಚಲನಚಿತ್ರ ಉದ್ಯಮ, ಮೂಲ ಹೊಂದಿದೆ. ಉದ್ಯಮ ಸುಮಾರು 300 ತಮಿಳು ಸಿನೆಮಾ ಒಂದು ವರ್ಷದ ಮಾಡುತ್ತದೆ, ಮತ್ತು ಅದರ ಚಿತ್ರ ನಗರದಲ್ಲಿ ಸಂಗೀತ ಕ್ಷೇತ್ರದಲ್ಲಿ ಪ್ರಾಬಲ್ಯ ಧ್ವನಿಮುದ್ರಿಕೆಗಳು. ಚೆನೈ ಉತ್ಸವಗಳು ಅನೇಕ ಆಚರಿಸುತ್ತದೆ. ಜನವರಿ ತಿಂಗಳಲ್ಲಿ ಆಚರಿಸಲಾಗುತ್ತದೆ ಪೊಂಗಲ್, ಪ್ರಮುಖ ಉತ್ಸವ ಮತ್ತು ಐದು ದಿನಗಳ ಕಾಲ ಆಚರಿಸಲಾಗುತ್ತದೆ. ತಮಿಳು ಹೊಸ ವರ್ಷದ ದಿನ ತಮಿಳು ಕ್ಯಾಲೆಂಡರ್ ಆರಂಭದಲ್ಲಿ ಸಾಮಾನ್ಯವಾಗಿ ಏಪ್ರಿಲ್ 14 ರಂದು ಬರುತ್ತದೆ ಮತ್ತು ವ್ಯಾಪಕವಾಗಿ ಆಚರಿಸಲಾಗುತ್ತದೆ ಸೂಚಿಸುತ್ತದೆ. ಕಾಸ್ಮೊಪೊಲಿಟನ್ ನಗರ, ದೀಪಾವಳಿ, ಈದ್ ಮತ್ತು ಕ್ರಿಸ್ಮಸ್ ನಂತಹ ಎಲ್ಲಾ ಪ್ರಮುಖ ಧಾರ್ಮಿಕ ಹಬ್ಬಗಳು ಇಲ್ಲಿ ಆಚರಿಸಲಾಗುತ್ತದೆ.https://www.madras.com/v/festivals/ ಚೆನೈ ಸಾಮಾನ್ಯವಾಗಿ ಅಕ್ಕಿ ಆಧಾರಿತ ಆವಿಯಲ್ಲಿ ಬಿಸಿ ಫಿಲ್ಟರ್ ಕಾಫಿ ಬಡಿಸಲಾಗುತ್ತದೆ ಪೊಂಗಲ್, ದೋಸೆ, ಇಡ್ಲಿ ಅಥವಾ ವಡಾ ರೀತಿಯ ಭಕ್ಷ್ಯಗಳು, ಚೆನೈ ಸೇವಿಸಲ್ಪಡುವ ಒಂದು ಅತ್ಯಂತ ಜನಪ್ರಿಯ ಪಾನೀಯ ಸೇರಿದಂತೆ ಬೆಳಕಿನ ಊಟ ಅಥವಾ TIFFIN ನೀಡುವ ಅಸಂಖ್ಯಾತ ರೆಸ್ಟಾರಂಟ್ ಪ್ರಸಿದ್ಧವಾಗಿದೆ. ಈ ಅನನ್ಯ ಪಾಕಪದ್ಧತಿ ಭಾರತ ಮತ್ತು ಪ್ರಪಂಚದ ಇತರ ಭಾಗಗಳಲ್ಲಿ ಅನೇಕ ಒಂದು ಮದ್ರಾಸ್ ಕೆಫೆ ಮರುರೂಪಗೊಳ್ಳುತ್ತದೆ. ಇವನ್ನೂ ನೋಡಿ: ಚೆನೈ ಪ್ರವಾಸೋದ್ಯಮ ಮತ್ತು ಚೆನೈ ತಿನಿಸು [ಬದಲಾಯಿಸಿ] ಸಾರಿಗೆ ಸಂಪರ್ಕ (ಸಾರಿಗೆ) ಮುಖ್ಯ ಲೇಖನ: ಚೆನೈ ಸಾರಿಗೆ ಚೆನೈ ಮಹಾನಗರ ಪ್ರದೇಶದಲ್ಲಿ ರಸ್ತೆ ಮತ್ತು ರೈಲು ಜಾಲದ ನಕ್ಷೆ ಜನಪ್ರಿಯವಾಗಿ "ದಕ್ಷಿಣ ಭಾರತಕ್ಕೆ ಗೇಟ್ವೇ" ಎಂದು ಕರೆಯಲಾಗುತ್ತದೆ, ಚೆನೈ ಮತ್ತು ಅಂತರರಾಷ್ಟ್ರೀಯವಾಗಿ ಮತ್ತು ಭಾರತದ ಇತರ ಭಾಗಗಳೊಂದಿಗೆ ಜೋಡಿಸುತ್ತವೆ. ಐದು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಪಸರಿಸುವ ಕೋಲ್ಕತಾ (ಕಲ್ಕತ್ತಾ), ಬೆಂಗಳೂರು, ತ್ರಿಚಿ, ತಿರುವಳ್ಳೂರು, ಮತ್ತು ಪಾಂಡಿಚೇರಿ ಕಡೆಗೆ ಹೊರಕ್ಕೆ. ಚೆನೈ ಎಲ್ಲಾ ಅಂತರ ಬಸ್ಸುಗಳ ಟರ್ಮಿನಸ್ ಸೇವೆಸಲ್ಲಿಸುತ್ತದೆ ಚೆನೈ Mofussil ಬಸ್ ಟರ್ಮಿನಸ್ (CMBT), ದಕ್ಷಿಣ ಏಷ್ಯಾದಲ್ಲಿ ದೊಡ್ಡ ಬಸ್ ನಿಲ್ದಾಣ. ಏಳು ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆಗಳು ಅಂತರ ನಗರ ಮತ್ತು ಅಂತರ ರಾಜ್ಯ ಬಸ್ ಸೇವೆಗಳನ್ನು ನಿರ್ವಹಿಸುತ್ತವೆ. ಅನೇಕ ಖಾಸಗಿ ಅಂತರ ನಗರ ಹಾಗೂ ಚೆನೈ ನಿಂದ ಕಾರ್ಯನಿರ್ವಹಿಸುವ ಅಂತರ ರಾಜ್ಯ ಬಸ್ ಕಂಪನಿಗಳು ಇವೆ. ಚೆನೈ ಇಂಟರ್ನ್ಯಾಷನಲ್ ಏರ್ಪೋರ್ಟ್ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಎರಡೂ ನಗರದ ವಿಮಾನ ಕಾರ್ಯನಿರ್ವಹಿಸುತ್ತದೆ ಮತ್ತು ಭಾರತದ ಮೂರನೇ ಅವಿಶ್ರಾಂತ ಮತ್ತು ದಕ್ಷಿಣ ಭಾರತದ ಪ್ರಮುಖ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿದೆ. ನಗರದ ಸುಮಾರು ಮೂವತ್ತು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನೌಕೆಗಳ ಮೂಲಕ ದಕ್ಷಿಣ ಏಷ್ಯಾ, ಆಗ್ನೇಯ ಏಷ್ಯಾ, ಮಧ್ಯಪ್ರಾಚ್ಯ, ಯುರೋಪ್ ಮತ್ತು ಉತ್ತರ ಅಮೆರಿಕಾದಲ್ಲಿ ಪ್ರಮುಖ ಕೇಂದ್ರಗಳಲ್ಲಿ ಸಂಪರ್ಕ ಇದೆ. ವಿಮಾನನಿಲ್ದಾಣವು ದೇಶದಲ್ಲಿ ಎರಡನೇ ಜನನಿಬಿಡ ಸರಕು ಟರ್ಮಿನಸ್. ನಗರದ ಎರಡು ಪ್ರಮುಖ ಅವುಗಳೆಂದರೆ ಪೋರ್ಟುಗಳನ್ನು ದೊಡ್ಡ ಕೃತಕ ಬಂದರುಗಳು ಮತ್ತು ಎನ್ನೋರ್ ಪೋರ್ಟ್ ಒಂದಾಗಿದೆ ಚೆನೈ ಪೋರ್ಟ್ ಸೇವೆಯನ್ನು ಇದೆ. ಚೆನೈ ಪೋರ್ಟ್ ಸಾಮಾನ್ಯ ಕೈಗಾರಿಕಾ ಸರಕು, ಇತ್ಯಾದಿ ಎನ್ನೋರ್ ಪೋರ್ಟ್ ಕಲ್ಲಿದ್ದಲು, ಅದಿರು ಮತ್ತು ಇತರ ದೊಡ್ಡ ಪ್ರಮಾಣದ ಉತ್ಪನ್ನಗಳ ಸರಕನ್ನು ನಿರ್ವಹಿಸುತ್ತದೆ ವಾಹನಗಳು ನಿಭಾಯಿಸಲು ಭಾರತದ ಎರಡನೇ ಅತ್ಯಂತ ಅವಿಶ್ರಾಂತ ಧಾರಕ ಕೇಂದ್ರವಾಗಿದೆ. Royapuram ಒಂದು ಸಣ್ಣ ಬಂದರು ಸ್ಥಳೀಯ ಮೀನುಗಾರಿಕೆ ದೋಣಿಗಳು ಮತ್ತು trawlers ಬಳಸಲ್ಪಡುತ್ತದೆ. 1900 ರಲ್ಲಿ 1873 ಮತ್ತು ಹೊಸದಾಗಿ ನಿರ್ಮಿಸಿದ ಚೆನೈ ಸೆಂಟ್ರಲ್, Royapuram ರಿಂದ ತೆಗೆದುಕೊಳ್ಳುವ, 1907 ರಿಂದ ನಗರದ ಮುಖ್ಯ ರೈಲ್ವೆ ಸ್ಟೇಷನ್ ಆಗಿದೆ. ಒಳಗೆ ಸ್ಥಳಗಳಿಗೆ ರೈಲುಗಳು ಮುಂಬಯಿ, ಬೆಂಗಳೂರು, ದೆಹಲಿ, ಹೈದರಾಬಾದ್, ಕೊಯಿಮತ್ತೂರು ಮತ್ತು ಪಟ್ಟಣಗಳು ​​ಭಾರತದಲ್ಲಿ, ಮತ್ತು ಚೆನೈ ಎಗ್ಮೋರ್ ಎಲ್ಲಾ ಪ್ರಮುಖ ನಗರಗಳಿಗೆ ರೈಲುಗಳು ನಗರದ ಅತಿದೊಡ್ಡ ರೈಲ್ವೆ ನಿಲ್ದಾಣ ಎರಡು ಪ್ರಮುಖ ರೈಲ್ವೆ ನಿಲ್ದಾಣಗಳಿವೆ, ಚೆನೈ ಸೆಂಟ್ರಲ್ ಸ್ಟೇಷನ್, ಇವೆ ತಮಿಳುನಾಡು. ಬಸ್ ಮತ್ತು ರೈಲುಗಳು ಸಾರ್ವಜನಿಕ ಸಾರಿಗೆ ಜನಪ್ರಿಯ ರೂಪ. ಚೆನೈ ಸಬ್ ಅರ್ಬನ್ ರೈಲ್ವೇ ನೆಟ್ವರ್ಕ್ ಅವುಗಳೆಂದರೆ ನಾಲ್ಕು ರೈಲ್ವೆ ವಲಯಗಳು, ಚೆನೈ ಸೆಂಟ್ರಲ್ ಅರಕ್ಕೋಣಮ್, ಚೆನೈ ಸೆಂಟ್ರಲ್ ಪೇಟ, ಮತ್ತು ಚೆನೈ ಬೀಚ್-Chengalpattu ಒಳಗೊಂಡಿದೆ. ನಾಲ್ಕನೇ ಸೆಕ್ಟರ್ ಉಳಿದ ರೈಲು ಜಾಲದ ಮೂಲಕ ಒಂದಕ್ಕೊಂದನ್ನು ಸೇರಿಸಿದಾಗ ಅದು ಎತ್ತರದ MRTS ಉಪನಗರದ ರೈಲು ವ್ಯವಸ್ಥೆಯನ್ನು ಹೊಂದಿದೆ. ರೈಲು ಜಾಲ ಬ್ರಾಡ್ಗೇಜ್ ಹೊಂದಿದೆ. ಸಿಟಿ ಒಂದು ಭೂಗತ ಮೆಟ್ರೋ ನಿರ್ಮಿಸಲು ಯೋಜನೆಯನ್ನು ಹೊಂದಿದೆ. ಮಹಾನಗರ ಸಾರಿಗೆ ಸಂಸ್ಥೆ (ಎಂಟಿಸಿ) ಒಂದು ವ್ಯಾಪಕವಾದ ನಗರ ಬಸ್ ವಿಧಾನವನ್ನು ನಡೆಸುತ್ತದೆ. ಬಸ್ ಸೇವೆ 375 ಮಾರ್ಗಗಳಲ್ಲಿ 2.773 ಬಸ್ಗಳನ್ನು ಒಳಗೊಂಡಿದೆ, ಮತ್ತು ದೈನಂದಿನ ಅಂದಾಜು 4.2 ದಶಲಕ್ಷ ಪ್ರಯಾಣಿಕರನ್ನು ಸಾಗಿಸುತ್ತದೆ. ಎಂಟಿಸಿ ಸೇವೆಗಳ ಹೊರತಾಗಿ, ಮಿನಿ ಬಸ್ ಚೆನೈ ಮಹಾನಗರದ ಉಪನಗರಗಳಲ್ಲಿ ಕಂಡುಬರುತ್ತವೆ. ಬಸ್ ಸೇವೆಗಳು ರೀತಿಯಲ್ಲಿ ರನ್ ಮತ್ತು ಜನಪ್ರಿಯವಾಗಿ "ಮಾಕ್ಸಿ ಕ್ಯಾಬ್ಸ್" ನಗರದಲ್ಲಿ ಹಲವಾರು ಮಾರ್ಗಗಳಲ್ಲಿ ಸಂಚರಿಸುತ್ತವೆ ಕೂಡ ಕರೆಯುತ್ತಾರೆ ಇದು ವ್ಯಾನ್ಸ್. ನೇಮಕ ಸಾರಿಗೆ ಸೌಲಭ್ಯಗಳನ್ನು ಅದುಮು ಕರೆ ಟ್ಯಾಕ್ಸಿಗಳು, ಸ್ಥಿರ ದರ ಪ್ರವಾಸಿ ಟ್ಯಾಕ್ಸಿಗಳು ಹಾಗು ಆಟೋ ರಿಕ್ಷಾಗಳು ಸೇರಿವೆ. [ಬದಲಾಯಿಸಿ] ಮಾಧ್ಯಮ (ಮಾಧ್ಯಮ) ಚೆನೈ ಎಂಟು ಪ್ರಮುಖ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳು ಬಗ್ಗೆ ಪ್ರಕಟಿಸಲು ಆರು ಪ್ರಮುಖ ಪತ್ರಿಕೆಗಳ ಗುಂಪುಗಳನ್ನು ಹೊಂದಿದೆ. ಪ್ರಮುಖ ಇಂಗ್ಲೀಷ್ ದಿನಪತ್ರಿಕೆಗಳು ಹಿಂದೂ, ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್, ಡೆಕ್ಕನ್ ಕ್ರಾನಿಕಲ್ ಮತ್ತು ಸಂಜೆ ದೈನಿಕಗಳು, ಟ್ರಿನಿಟಿ ಮಿರರ್ ಮತ್ತು ನ್ಯೂಸ್ ಇಂದು. ನಗರದಿಂದ ಪ್ರಕಟವಾದ ಪ್ರಮುಖ ವ್ಯಾಪಾರ ದಿನಪತ್ರಿಕೆಗಳು ಇಕನಾಮಿಕ್ ಟೈಮ್ಸ್, ಹಿಂದೂ ಬಿಸಿನೆಸ್ ಲೈನ್, ಬ್ಯುಸಿನೆಸ್ ಸ್ಟ್ಯಾಂಡರ್ಡ್, ಮತ್ತು ಫೈನಾನ್ಷಿಯಲ್ ಎಕ್ಸ್ಪ್ರೆಸ್ ಇವೆ. ಪ್ರಮುಖ ತಮಿಳು ದಿನಪತ್ರಿಕೆಗಳು ದಿನತಂತಿ, ದಿನಕರನ್, ದಿನಮಣಿ, ದಿನಮಲಾರ್, ತಮಿಳು ಮುರಸು ಮಕ್ಕಳ್ ಕುರಾಲ್ ಮತ್ತು ಮಲೈ ಮಲಾರ್ ಸೇರಿವೆ. ತೆಲುಗು ದೈನಂದಿನ ಈನಾಡು ಮತ್ತು ಹಿಂದಿ ದಿನಪತ್ರಿಕೆ ರಾಜಸ್ಥಾನ ಪತ್ರಿಕಾ ಸಹ ಪ್ರಕಟವಾಗುತ್ತವೆ. ಪ್ರಮುಖ ಪತ್ರಿಕೆಗಳು ಜೊತೆಗೆ, ಕೆಲವು ಪ್ರದೇಶಗಳಲ್ಲಿ ಗೆ ಅನುಕೂಲವಾಗುವ ಅದ್ಯಾರ್ ಟೈಮ್ಸ್ ಸ್ಥಳೀಯ ನೆರೆಹೊರೆಯ ಪತ್ರಿಕೆಗಳು ಅನೇಕ ಇವೆ. ಚೆನೈ ಪ್ರಕಟವಾಗುತ್ತವೆ ನಿಯತಕಾಲಿಕೆಗಳು ಆನಂದ Vikatan, ಕುಮುದಂನಲ್ಲಿ, ಕಲ್ಕಿ, Kungumam, ಫ್ರಂಟ್ಲೈನ್ ಮತ್ತು ಸ್ಪೋರ್ಟ್ ಸೇರಿವೆ. ದೂರದರ್ಶನವು ಎರಡು ಪ್ರಾದೇಶಿಕ ಚಾನಲ್ ಮತ್ತು ಅದರ ಚೆನೈ ಕೇಂದ್ರದಿಂದ ಎರಡು ಉಪಗ್ರಹ ದೂರದರ್ಶನ ವಾಹಿನಿಗಳು ಸಾಗುತ್ತದೆ. ಸನ್ ಟಿವಿ, ರಾಜ್ TV, ಸ್ಟಾರ್ ವಿಜಯ್ ನಂತಹ ಖಾಸಗಿ ತಮಿಳು ಉಪಗ್ರಹ ದೂರದರ್ಶನ ಜಾಲಗಳು, ಜಯಾ ಟಿವಿ ಚೆನೈ ಹೊರಗೆ ಪ್ರಸಾರ. ನಗರದ ಅಖಿಲ ಭಾರತ ರೇಡಿಯೋ ಮತ್ತು ಖಾಸಗಿ ಪ್ರಸಾರಕರು ನಿರ್ವಹಿಸುವ ಎರಡು AM ಮತ್ತು ಐದು ವಾಣಿಜ್ಯ FM ರೇಡಿಯೋ ಕೇಂದ್ರಗಳನ್ನು ಹೊಂದಿದೆ. FM ರೇಡಿಯೋ ಕೇಂದ್ರಗಳು Suryan ಎಫ್ಎಂ, ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಮತ್ತು FM ರೈನ್ಬೋ ಇವೆ. [ಬದಲಾಯಿಸಿ] ಉಪಯುಕ್ತ ಸೇವೆಗಳು (ಯುಟಿಲಿಟಿ ಸರ್ವೀಸಸ್) ಚೆನೈ ಮತ್ತು ಉಪನಗರಗಳ ವಿವಿಧ ಪುರಸಭೆಗಳ ಕಾರ್ಪೊರೇಷನ್ ನಾಗರಿಕ ಸೇವೆಗಳು ನೋಡಿಕೊಳ್ಳಲು. ಕಸ ನಿರ್ವಹಣೆ ಓನಿಕ್ಸ್, ಒಂದು ಖಾಸಗಿ ಕಂಪನಿಯ ನಿರ್ವಹಿಸುತ್ತವೆ. ನೀರು ಸರಬರಾಜು ಮತ್ತು ಒಳಚರಂಡಿ ಚಿಕಿತ್ಸೆ ಜನಪ್ರಿಯವಾಗಿ ಮೆಟ್ರೋ ವಾಟರ್ ಎಂದು ಮೆಟ್ರೋಪಾಲಿಟನ್ ವಾಟರ್ ಸಪ್ಲೈ ಮತ್ತು ಕೊಳಚೆನೀರು ಬೋರ್ಡ್ ನಿರ್ವಹಿಸುತ್ತವೆ. ವಿದ್ಯುತ್ ತಮಿಳುನಾಡು ವಿದ್ಯುಚ್ಛಕ್ತಿ ಮಂಡಳಿ ಪೂರೈಕೆ. ಬಿಎಸ್ಎನ್ಎಲ್, ಟಾಟಾ ಇಂಡಿಕಾಮ್, ರಿಲಯನ್ಸ್ ಇನ್ಫೋಕಾಂ ಮತ್ತು ಏರ್ಟೆಲ್: ನಗರದ ದೂರವಾಣಿ ಸೇವೆಯನ್ನು ನಾಲ್ಕು ಸ್ಥಿರ ದೂರವಾಣಿ ಕಂಪನಿಗಳು ಸೇವೆ ಒದಗಿಸುತ್ತಿವೆ. ಬಿಎಸ್ಎನ್ಎಲ್, ಹಚ್, ಏರ್ಟೆಲ್ ಮತ್ತು ಏರ್ಸೆಲ್ ಸಿಡಿಎಂಎ ಸೇವೆಗಳನ್ನು ಇದು GSM ಸೇವೆಗಳನ್ನು ಮತ್ತು ಟಾಟಾ ಇಂಡಿಕಾಮ್ ಮತ್ತು ರಿಲಯನ್ಸ್ ಇನ್ಫೋಕಾಂ ನೀಡುವ: ಆರು ಮೊಬೈಲ್ ಫೋನ್ ಕಂಪನಿಗಳು. ಫೋನ್ ಕಂಪನಿಗಳು ಬ್ರಾಡ್ಬ್ಯಾಂಡ್ ಇಂಟರ್ನೆಟ್ ಪ್ರವೇಶವನ್ನು ಒದಗಿಸುತ್ತವೆ. SCV ಮತ್ತು Hathway ಪ್ರಮುಖ ಕೇಬಲ್ ಟಿವಿ ಸೇವೆ ಹೋಮ್ಗೆ providers.Direct ಮಾಡಲಾಗುತ್ತದೆ (DTH) ಡಿಡಿ ಡೈರೆಕ್ಟ್ ಪ್ಲಸ್ ಮತ್ತು ಡಿಶ್ ಟಿವಿ ಮೂಲಕ ಲಭ್ಯವಿದೆ. ಚೆನೈ ಕೇಬಲ್ ದೂರದರ್ಶನ ಷರತ್ತು ಪ್ರವೇಶ ಒದಗಿಸಲಾಗುತ್ತಿದೆ ಎಂದು ಭಾರತದ ಏಕೈಕ ನಗರವಾಗಿದೆ. [ಬದಲಾಯಿಸಿ] ಶಿಕ್ಷಣ ಚೆನೈ ಶಾಲೆಗಳಲ್ಲಿ ಎರಡೂ ತಮಿಳುನಾಡು ಸರ್ಕಾರ ಸಾರ್ವಜನಿಕವಾಗಿ ರನ್, ಅಥವಾ ಕೆಲವು ಸರ್ಕಾರದ ಹಣಕಾಸಿನ ನೆರವಿನೊಂದಿಗೆ, ಖಾಸಗಿಯಾಗಿ ನಡೆಸುತ್ತದೆ. ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಮಾಧ್ಯಮದ ಇಂಗ್ಲೀಷ್ ಆಗಿದೆ. ಸರಕಾರೀ ಶಾಲೆಗಳಲ್ಲಿ ಇಂಗ್ಲೀಷ್ ಮತ್ತು ತಮಿಳು ಮಾಧ್ಯಮ ಶಿಕ್ಷಣ, ಇಂಗ್ಲೀಷ್ ಬಹುತೇಕ ಆದ್ಯತೆ ಹೀಗೆ ಎರಡೂ ನೀಡುತ್ತವೆ. ಖಾಸಗಿ ಶಾಲೆಗಳು ಸಾಮಾನ್ಯವಾಗಿ ರಾಷ್ಟ್ರೀಯ CBSE ಮಂಡಳಿಗೆ ಅಥವಾ ತಮಿಳುನಾಡು ರಾಜ್ಯ ಬೋರ್ಡ್ ಗುರುತಿಸಲ್ಪಟ್ಟಿವೆ. ಕೆಲವು ಶಾಲೆಗಳು ICSE ಮಂಡಳಿ ಮತ್ತು ಮಾಂಟೆಸ್ಸರಿ ವ್ಯವಸ್ಥೆಗೆ ಸೇರಿವೆ. ಕೆಲವು ಶಾಲೆಗಳು ಇಂಟರ್ನ್ಯಾಷನಲ್ ಬ್ಯಕೆಲೌರಿಯೇಟ್ ಮತ್ತು ಅಮೆರಿಕನ್ ವ್ಯವಸ್ಥೆಗಳು ನೀಡುತ್ತವೆ. ಶಾಲಾ ಮೂರು ವಯಸ್ಸಿನಲ್ಲಿ ಆರಂಭವಾಗುತ್ತದೆ. ಶಿಶುವಿಹಾರ ಮತ್ತು ಶಾಲಾ ಹನ್ನೆರಡು ವರ್ಷಗಳ ಎರಡು ವರ್ಷಗಳ ನಂತರ, ವಿದ್ಯಾರ್ಥಿಗಳು ಅಲ್ಲದ ವೃತ್ತಿಪರ ಅಥವಾ ವೃತ್ತಿಪರ ವಿಶ್ವವಿದ್ಯಾಲಯ ಶಿಕ್ಷಣ ತೆಗೆದುಕೊಳ್ಳಬಹುದು. ಅಣ್ಣಾ ವಿಶ್ವವಿದ್ಯಾಲಯದ ಮುಖ್ಯ ಪ್ರವೇಶದ್ವಾರ. ನಗರದಲ್ಲಿ ಮೂರು ಕ್ಯಾಂಪಸ್ ಹೊಂದಿರುವ ಮದ್ರಾಸ್ (1857), ದಿ ಯೂನಿವರ್ಸಿಟಿ ಉದಾರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾರ್ಯಕ್ರಮಗಳನ್ನು ಒಂದು ಶ್ರೇಣಿಯನ್ನು ಒದಗಿಸುತ್ತದೆ. ನಗರದ ಕಾಲೇಜುಗಳು ಹೆಚ್ಚಿನ ವೈದ್ಯಕೀಯ, ಕಾನೂನು, ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿಶ್ವವಿದ್ಯಾನಿಲಯ ಮತ್ತು ಕೊಡುಗೆ ಕಾರ್ಯಕ್ರಮಗಳು ಗುರುತಿಸಲ್ಪಟ್ಟಿವೆ. ಕೆಲವು ಹಳೆಯ ಸಂಸ್ಥೆಗಳ ಸಂಬಂಧ ಎಲ್ಲಾ ಮದ್ರಾಸ್ ಕ್ರಿಶ್ಚಿಯನ್ ಕಾಲೇಜ್ (1837), ಪ್ರೆಸಿಡೆನ್ಸಿ ಕಾಲೇಜ್ (1840), ಪಚಿಯಪ್ಪ ಕಾಲೇಜಿನಲ್ಲಿ (1842), ಮದ್ರಾಸ್ ವೈದ್ಯಕೀಯ ಕಾಲೇಜ್ (1835), ಸ್ಟಾನ್ಲಿ ಮೆಡಿಕಲ್ ಕಾಲೇಜ್ (1938) ಮತ್ತು ವಿವೇಕಾನಂದ ಕಾಲೇಜು (1948), ಗಳು ಅದರ ರಚನೆಯ ಮೇಲೆ ಮದ್ರಾಸ್ ವಿಶ್ವವಿದ್ಯಾಲಯ ತಮ್ಮನ್ನು. ಇತರೆ ಸ್ವಾಯತ್ತ ಶಿಕ್ಷಣ ಸಂಸ್ಥೆಗಳು ಮಹಿಳಾ ಕ್ರಿಶ್ಚಿಯನ್ ಕಾಲೇಜು (1915), ಲೊಯೋಲಾ ಕಾಲೇಜ್, ಚೆನೈ (1925), ಫ್ಯಾಷನ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (1995), ಪತ್ರಿಕೋದ್ಯಮ ನ ಏಷ್ಯನ್ ಕಾಲೇಜ್ (2000) ಮತ್ತು ಸಮಾಜ ವರ್ಕ್ ಮದ್ರಾಸ್ ಸ್ಕೂಲ್ (1952) ಸೇರಿವೆ. ಟೆಕ್ನಾಲಜಿ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ (ಐಐಟಿ), ಮದ್ರಾಸ್ (1959), ನಗರದ ದಕ್ಷಿಣದಲ್ಲಿ ಇದೆ ಮತ್ತು ಇದರ ಇಂಜಿನಿಯರಿಂಗ್ ಅಂತಾರಾಷ್ಟ್ರೀಯವಾಗಿ ಖ್ಯಾತಿ ಇದೆ. ಹತ್ತಿರದ ಇದೆ, ಎಂಜಿನಿಯರಿಂಗ್, ಗಿಂಡಿ (1794), ಟೆಕ್ನಾಲಜಿ ಮದ್ರಾಸ್ ಇನ್ಸ್ಟಿಟ್ಯೂಟ್ (1949), ತಂತ್ರಜ್ಞಾನ (1944) ಆಫ್ ಅಲಗಪ್ಪ ಕಾಲೇಜ್ ಕಾಲೇಜ್ ಒಂದು ವಿಲೀನದಿಂದ ರೂಪುಗೊಂಡ ಅಣ್ಣಾ ವಿಶ್ವವಿದ್ಯಾನಿಲಯ (1978), ಪ್ರಮುಖ ಕ್ಯಾಂಪಸ್ ಹೊಂದಿದೆ, ಮತ್ತು ಆರ್ಕಿಟೆಕ್ಚರ್ ಮತ್ತು ಯೋಜನಾ (1957) ಆಫ್ ಸ್ಕೂಲ್. ಇಂಜಿನಿಯರಿಂಗ್, ತಂತ್ರಜ್ಞಾನ ಮತ್ತು ವಾಸ್ತುಶಿಲ್ಪ ಕಾರ್ಯಕ್ರಮಗಳನ್ನು ನೀಡುವ ತಮಿಳುನಾಡಿನ ಬಹುತೇಕ ಎಲ್ಲಾ ಕಾಲೇಜುಗಳು ಅಣ್ಣಾ ವಿಶ್ವವಿದ್ಯಾಲಯ ಗುರುತಿಸಲ್ಪಟ್ಟಿವೆ. ಉಳಿದ ಕಾಲೇಜುಗಳು ಸ್ವಾಯತ್ತ ಸ್ವಾಯತ್ತ ವಿಶ್ವವಿದ್ಯಾಲಯಗಳು ಇವೆ. ಚಿತ್ರ: Iitm.maingate.logo.jpg ಅದರ ಲೋಗೋ ಮತ್ತು ಅದರ ಗುರಿ ತೋರಿಸುವ ಐಐಟಿ ಮದ್ರಾಸ್ನ ಮುಖ್ಯ ಪ್ರವೇಶದ್ವಾರವು,. ಡಾ ಅಂಬೇಡ್ಕರ್ ಸರ್ಕಾರಿ ಕಾನೂನು ಕಾಲೇಜ್, ಚೆನೈ, ತಮಿಳುನಾಡು ಪ್ರಮುಖ ಕಾನೂನು ಕಾಲೇಜು 1891 ರಲ್ಲಿ ಸ್ಥಾಪಿಸಲಾಯಿತು. ಮದ್ರಾಸ್ ವೈದ್ಯಕೀಯ ಕಾಲೇಜ್, 1835 ರಲ್ಲಿ ಸ್ಥಾಪನೆಯಾದ [2], ಭಾರತೀಯ ಉಪಖಂಡದ ವೈದ್ಯಕೀಯ ಶಿಕ್ಷಣವನ್ನು ಒದಗಿಸುವ ಹಳೆಯ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಸ್ಟಾನ್ಲಿ ಮೆಡಿಕಲ್ ಕಾಲೇಜ್, Kilpauk ವೈದ್ಯಕೀಯ ಕಾಲೇಜು ಮತ್ತು ಶ್ರೀ ರಾಮಚಂದ್ರ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಗರದ ಇತರೆ ಗಮನೀಯ ವೈದ್ಯಕೀಯ ಕಾಲೇಜುಗಳು. 1903 ರಲ್ಲಿ ಸ್ಥಾಪನೆಯಾದ ಮದ್ರಾಸ್ ಪಶುವೈದ್ಯಕೀಯ ಕಾಲೇಜ್ ಭಾರತದಲ್ಲೇ ಮೊದಲ ಪದ್ಧತಿಯಾಗಿತ್ತು. 1890 ರಲ್ಲಿ ನಿರ್ಮಿಸಿದ ಕನ್ನೆಮಾರಾ ಪಬ್ಲಿಕ್ ಲೈಬ್ರರಿ ಭಾರತದಲ್ಲಿ ನಾಲ್ಕು ರಾಷ್ಟ್ರೀಯ ಡಿಪಾಸಿಟರಿ ಕೇಂದ್ರಗಳು ಒಂದಾಗಿದೆ. ಈ ಕೇಂದ್ರಗಳು ಭಾರತದಲ್ಲಿ ಪ್ರಕಟವಾದ ಎಲ್ಲಾ ಪತ್ರಿಕೆಗಳು ಮತ್ತು ಪುಸ್ತಕಗಳ ಪ್ರತಿಯೊಂದನ್ನು ಪಡೆಯುವುದು. ಇದು ಒಂದು ಡಿಕ್ಲೇರ್ಡ್ ಯುನೆಸ್ಕೋ ಮಾಹಿತಿಯನ್ನು ಕೇಂದ್ರವಾಗಿದೆ. ಇತರ ಪ್ರಮುಖ ಗ್ರಂಥಾಲಯಗಳು ಫೋರ್ಟ್ ಸೇಂಟ್ ಜಾರ್ಜ್ ಭಾರತದ ಗ್ರಂಥಾಲಯದ ಪುರಾತತ್ವ ಇಲಾಖೆ, ರಾಮಕೃಷ್ಣ ಮಠ ಲೈಬ್ರರಿ ಮತ್ತು ಕೃಷ್ಣಮೂರ್ತಿ ಪ್ರತಿಷ್ಠಾನವು ಪ್ರಪಂಚದ ಪ್ರಧಾನ ಕಛೇರಿಯ ಆವರಣದಲ್ಲಿ ಕೃಷ್ಣಮೂರ್ತಿ ಫೌಂಡೇಶನ್ ಲೈಬ್ರರಿ. [ಬದಲಾಯಿಸಿ] ಕ್ರೀಡೆಗಳು ಕ್ರಿಕೆಟ್ ಚೆನೈ ಅತ್ಯಂತ ಜನಪ್ರಿಯ ಕ್ರೀಡೆ. MAC ಎಂದು ಜನಪ್ರಿಯವಾಗಿ MA ಚಿದಂಬರಂ ಚೆಪಾಕ್ ಕ್ರೀಡಾಂಗಣ (ಹಿಂದೆ ಮದ್ರಾಸ್ ಕ್ರಿಕೆಟ್ ಕ್ಲಬ್ ಮೈದಾನ ಅಥವಾ ಚೆಪಾಕ್ ಕ್ರೀಡಾಂಗಣ ಎಂದು ಕರೆಯುತ್ತಾರೆ) ಮತ್ತು, 1916 ರಲ್ಲಿ ನಿರ್ಮಿಸಲಾಯಿತು ಭಾರತದಲ್ಲಿ ಹಳೆಯ ಕ್ರಿಕೆಟ್ ಕ್ರೀಡಾಂಗಣಗಳಲ್ಲಿ ಒಂದಾಗಿದೆ. ಹೆಚ್ಚು 50,000 ಆಸನಗಳು ಮತ್ತು ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ನೆಲೆಯಾಗಿದೆ. ಐಐಟಿ ಮದ್ರಾಸ್ ಆವರಣದಲ್ಲಿ ಕೆಂಪ್ಲಾಸ್ಟ್ ಕ್ರಿಕೆಟ್ ಗ್ರೌಂಡ್ ಮತ್ತೊಂದು ಪ್ರಮುಖ ಕ್ರಿಕೆಟ್ ಸ್ಥಳವಾಗಿದೆ. ಚಿತ್ರ: Chennai.ATP.jpg ಎಟಿಪಿ ಚೆನೈ ಓಪನ್ - Nungambakkam ರಲ್ಲಿ SDAT ಟೆನಿಸ್ ಕ್ರೀಡಾಂಗಣ ಸಂಕೀರ್ಣದಲ್ಲಿ ಸೆಂಟರ್ ಕೋರ್ಟ್ ಟೆನಿಸ್ ಚೆನೈ ಇನ್ನೊಂದು ಜನಪ್ರಿಯ ಆಟ. ಮತ್ತು 6,000 ಪ್ರೇಕ್ಷಕರ ಬಗ್ಗೆ Nungambakkam ಸ್ಥಾನಗಳಲ್ಲಿ SDAT ಟೆನಿಸ್ ಕ್ರೀಡಾಂಗಣ ಐದು ಸಂಶ್ಲೇಷಿತ ಮೇಲ್ಮೈ ಅಂಕಣಗಳನ್ನು ಹೊಂದಿದೆ. ಸ್ಟೇಡಿಯಂನಲ್ಲಿ ಭಾರತದ ಏಕೈಕ ಎಟಿಪಿ, ಚೆನೈ ಓಪನ್ ಆಯೋಜಿಸುತ್ತದೆ. ಪಂದ್ಯಾವಳಿಯ ಟೆನಿಸ್ ವೃತ್ತಿಪರರ ಸಂಘದ ಮೂಲಕ ತನ್ನ ಎರಡನೇ ವರ್ಷದ ಅತ್ಯುತ್ತಮ ಹೊಸ ಈವೆಂಟ್ ಶೀರ್ಷಿಕೆ ನೀಡಲಾಯಿತು. ಉದಾಹರಣೆಗೆ ವಿಜಯ್ ಅಮೃತ್ರಾಜ್, ರಾಮನಾಥನ್ ಕೃಷ್ಣನ್, ರಮೇಶ್ ಕೃಷ್ಣನ್ ಮತ್ತು ಚೆನೈ ನಿಂದ ಮಹೇಶ್ ಭೂಪತಿ ಆಲಿಕಲ್ಲು ಭಾರತೀಯ ಟೆನಿಸ್ ವೃತ್ತಿಪರರ. ಲಿಯಾಂಡರ್ ಪೇಸ್ ತನ್ನ ಶಾಲಾಶಿಕ್ಷಣವನ್ನು ಮತ್ತು ಚೆನೈ ಬಗ್ಗೆ ತರಬೇತಿ ಪಡೆದ. ಮೇಯರ್ ರಾಧಾಕೃಷ್ಣನ್ ಸ್ಟೇಡಿಯಂ ಹಾಕಿ ಪಂದ್ಯಗಳನ್ನು ಸ್ಥಾನಗಳನ್ನು 4,000 ನಿಶ್ಚಿತ ಸ್ಥಳವಾಗಿದೆ. ಚೆನೈ Veerans, ಒಂದು ಪ್ರೀಮಿಯರ್ ಹಾಕಿ ಲೀಗ್ ತಂಡ ಚೆನೈ ನೆಲೆಗೊಂಡಿದೆ. ಕ್ರೀಡಾಂಗಣದಲ್ಲಿ 2005 ರಲ್ಲಿ ಇತ್ತೀಚೆಗೆ ಎರಡು ಬಾರಿ ಚಾಂಪಿಯನ್ಸ್ ಟ್ರೋಫಿ (ವಿಶ್ವದ 6 ಅತ್ಯುತ್ತಮ ತಂಡಗಳನ್ನೊಳಗೊಂಡ) ಆಯೋಜಿಸಿದೆ. ಜವಾಹರಲಾಲ್ ನೆಹರು ಸ್ಟೇಡಿಯಂ ಸ್ಥಾನಗಳನ್ನು 40,000 ಮತ್ತು ಅತಿಥೇಯಗಳ ಫುಟ್ಬಾಲ್ (ಸಾಕರ್), ಮತ್ತು ಅಥ್ಲೆಟಿಕ್ ಸ್ಪರ್ಧೆಗಳು. ಸಂಕೀರ್ಣ ಕೂಡ ವಾಲಿಬಾಲ್, ಬ್ಯಾಸ್ಕೆಟ್ ಬಾಲ್, ಟೇಬಲ್ ಟೆನಿಸ್ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುತ್ತದೆ ಇದು 8,000 ಒಂದು ಆಸನ ಸಾಮರ್ಥ್ಯವನ್ನು ಹೊಂದಿರುವ ಬಹು ಉದ್ದೇಶದ ಒಳಾಂಗಣ ಕ್ರೀಡಾಂಗಣದ ವ್ಯವಸ್ಥೆಯಿದೆ. ವೇಲಾಚೇರಿ ಅಕ್ವಾಟಿಕ್ ಕಾಂಪ್ಲೆಕ್ಸ್ ಸ್ಥಾನಗಳನ್ನು 4,000 ಮತ್ತು ಜಲ ಕ್ರೀಡೆಗಳು ವಿವಿಧ ರೀತಿಯ ಆಯೋಜಿಸುತ್ತದೆ. ಚೆನೈ ದಕ್ಷಿಣ ಏಷ್ಯನ್ ಫೆಡರೇಷನ್ (ಎಸ್ಎಎಫ್) ಗೇಮ್ಸ್ 1995 ಆಯೋಜಿಸಿದೆ. ಕುದುರೆ ರೇಸಿಂಗ್ ಗಿಂಡಿ ರೇಸ್ ಕೋರ್ಸ್ 1777 ರಲ್ಲಿ ಸ್ಥಾಪಿಸಲಾಯಿತು. ಮೋಟಾರ್ ರೇಸಿಂಗ್ ಘಟನೆಗಳು ಕಾರುಗಳು ಶ್ರೀಪೆರುಂಬುದೂರ್ (Thirupperumbudur) ಟ್ರ್ಯಾಕ್, ಮತ್ತು ಸೈಕಲ್ಗಳಲ್ಲಿ Sholavaram ಟ್ರ್ಯಾಕ್ ಆಯೋಜಿಸಲಾಗುತ್ತದೆ. ಮದ್ರಾಸ್ ಬೋಟ್ ಕ್ಲಬ್ ಬೇಸಿನ್ ಬ್ರಿಡ್ಜ್ ಮತ್ತು ಅತಿಥೇಯಗಳ ರೊವಿಂಗ್ ಓಟಗಳು ನಲ್ಲಿ 1867 ಸ್ಥಾಪಿಸಲಾಯಿತು. 19 ನೇ ಶತಮಾನದಲ್ಲಿ ಸ್ಥಾಪಿಸಲಾಯಿತು ಇವೆರಡೂ ಕಾಸ್ಮೊಪೊಲಿಟನ್ ಕ್ಲಬ್, ಮತ್ತು ಆಟದ ಮೈದಾನ ಕ್ಲಬ್ ಗಾಲ್ಫ್,: ನಗರದ ಎರಡು 18 ಹೋಲ್ ಗಾಲ್ಫ್ ಕೋರ್ಸ್ಗಳನ್ನು ಹೊಂದಿದ್ದು. ಚೆನೈ ಮೊದಲ ಕಾಮನ್ವೆಲ್ತ್ ಜೂನಿಯರ್ ಫೆನ್ಸಿಂಗ್ ಚಾಂಪಿಯನ್ಶಿಪ್ಗಳಿಗೆ 2006 ರಲ್ಲಿ ಸ್ಥಳವಾಗಿತ್ತು. [ಬದಲಾಯಿಸಿ] ಉಲ್ಲೇಖಗಳು ಉಲ್ಲೇಖಗಳು ತಮಿಳುನಾಡಿನ ನಗರಗಳು
975
https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1%20%E0%B2%B8%E0%B2%BE%E0%B2%B9%E0%B2%BF%E0%B2%A4%E0%B3%8D%E0%B2%AF%20%E0%B2%B8%E0%B2%AE%E0%B3%8D%E0%B2%AE%E0%B3%87%E0%B2%B3%E0%B2%A8
ಕನ್ನಡ ಸಾಹಿತ್ಯ ಸಮ್ಮೇಳನ
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ. ಹಿನ್ನಲೆ ೧೯೧೪ರ ದಿ ಮೈಸೂರು ಎಕಾನಾಮಿಕ್ ಕಾನ್ಫೆರೆನ್ಸ್ (ಮೈಸೂರು ಸಂಪದಭ್ಯುದಯ ಸಮಾಜ) ಸಮ್ಮೆಳನದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿಗೆ ಪೂರಕವಾದ ಪರಿಷತ್ತನ್ನು ಸ್ಥಾಪಿಸುವ ವಿಚಾರದಲ್ಲಿ ರಾವ್ ಬಹದ್ದೂರ್ ಎಂ. ಶಾಮರಾವ್, ಕರ್ಪೂರ ಶ್ರೀನಿವಾಸರಾವ್ ಮತ್ತು ಪಿ. ಎಸ್. ಅಚ್ಯುತರಾವ್ ಅವರುಗಳನ್ನೊಳಗೊಂಡ ಉಪಸಮಿತಿಯನ್ನು ರಚಿಸಲಾಯಿತು. ಈ ಉಪಸಮಿತಿಯು ಅಂದಿನ ವಿವಿಧ ಕನ್ನಡ ನಾಡುಗಳ ಪ್ರಾಜ್ಞರೊಡನೆ ಸಮಾಲೋಚಿಸಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ, ಆ ಸಮ್ಮೇಳನಗಳಲ್ಲಿ ಕೆಲವು ಉದ್ದೇಶ ಸಾಧನಕ್ರಮಗಳನ್ನು ಚಿಂತಿಸುವ ಕುರಿತಾದ ಮಾರ್ಗದರ್ಶನ ಸೂತ್ರಗಳನ್ನು ರೂಪಿಸಿತು. ಕನ್ನಡ ಭಾಷೆಯಲ್ಲಿ ವ್ಯಾಕರಣ, ಚರಿತ್ರೆ, ನಿಘಂಟು ಬರೆಯಿಸುವುದು, ನವೀನಶಾಸ್ತ್ರಗಳಿಗೆ ಸಂಬಂಧಪಟ್ಟ ಕನ್ನಡ ಗ್ರಂಥಗಳಲ್ಲಿ ಪ್ರಯೋಗಿಸಲು ಯೋಗ್ಯವಾದ ಪಾರಿಭಾಷಿಕ ಶಬ್ದಗಳ ಕೋಶವನ್ನು ಪ್ರಕಟಿಸುವುದು. ತತ್ವಶಾಸ್ತ್ರ, ಪ್ರಕೃತಿವಿಜ್ಞಾನ, ಚರಿತ್ರೆ, ಸಾಹಿತ್ಯ ಮೊದಲಾದ ವಿಷಯಗಳಿಗೆ ಸಂಬಂಧಪಡುವ ಗ್ರಂಥಗಳನ್ನು ಕನ್ನಡದಲ್ಲಿ ಬರೆಯುವುದಕ್ಕೆ ಪ್ರೋತ್ಸಾಹಕೊಟ್ಟು ಅವುಗಳನ್ನು ಪ್ರಚುರಪಡಿಸುವುದು. ಕನ್ನಡ ಭಾಷೆಗೂ ಕನ್ನಡ ಗ್ರಂಥಗಳಿಗೂ ಸಂಬಂಧಪಟ್ಟ ಎಲ್ಲಾ ಚರ್ಚಾಂಶಗಳನ್ನೂ ವಿಚಾರಮಾಡಿ ನಿರ್ಣಯಿಸುವುದು. ಬೆರೆ ಭಾಷೆಗಳಲ್ಲಿರುವ ಉತ್ತಮ ಗ್ರಂಥಗಳನ್ನು ಕನ್ನಡಿಸಿ ಪ್ರಕಟಿಸುವುದು. ಉತ್ಕೃಷ್ಟವಾದ ಪ್ರಾಚೀನ ಗ್ರಂಥಗಳನ್ನೂ, ಕನ್ನಡ ದೇಶಗಳ ಚರಿತ್ರೆಯನ್ನೊಳಗೊಂಡ ಗ್ರಂಥಗಳನ್ನೂ ಸಂಗ್ರಹಿಸಿ, ಅದನ್ನು ಪರಿಷ್ಕರಿಸಿ ಪ್ರಕಟಿಸುವುದೂ ಅಲ್ಲದೆ, ಕನ್ನಡನಾಡಿನ ಪೂರ್ವಸ್ಥಿತಿಯನ್ನು ವಿಶದಗೊಳಿಸುವ ವಸ್ತುಗಳನ್ನು ಕೂಡಿಟ್ಟು ಅವುಗಳನ್ನು ಕಾಪಾಡುವುದಕ್ಕಾಗಿ ಪ್ರಾಚೀನ ವಸ್ತುಸಂಗ್ರಹಾಲಯವನ್ನೇರ್ಪಡಿಸುವುದು. ಕರ್ನಾಟಕ ಭಾಷಾಸಂಸ್ಕರಣ, ಕರ್ಣಾಟಕ ಗ್ರಂಥಾಭಿವೃದ್ಧಿಗಳನ್ನು ಕುರಿತು ಪಂಡಿತಯೋಗ್ಯವಾದ ಲೇಖನಗಳನ್ನೊಳಕೊಂಡ ಕನ್ನಡದ ಪತ್ರಿಕೆಗಳನ್ನು ಪ್ರಕಟಿಸುವುದು. ಗ್ರಂಥಕರ್ತರಿಗೆ ಬಿರುದು ಸಂಭಾವನೆ ಕೊಡುವುದು. ಕರ್ನಾಟಕ ಭಾಷೆಗೂ ಸಾಹಿತ್ಯಕ್ಕೂ ಸಂಬಂಧಿಸಿದ ಅಪೂರ್ವ ಪರಿಶೋಧನ ಕಾರ್ಯದಲ್ಲಿ ನಿರತರಾಗಿರುವ ಕನ್ನಡ ಅಥವಾ ಸಂಸ್ಕೃತ ವಿದ್ವಾಂಸರಿಗೆ ಪಂಡಿತವೇತನಗಳನ್ನು ಕೊಡುವುದು. ಕರ್ನಾಟಕ ಭಾಷೋನ್ನತಿಗೂ, ಗ್ರಂಥಾಭಿವೃದ್ಧಿಗೂ ಸಂಬಂಧಪಡುವ ಸಮಸ್ತ ವಿಷಯಗಳನ್ನೂ ಆಯಾ ಸರ್ಕಾರದವರ ಪರಾಮರ್ಶಕ್ಕೆ ತಂದು ಅವನ್ನು ತೃಪ್ತಿಕರವಾಗಿ ವ್ಯವಸ್ಥೆಮಾಡಿಸಿಕೊಳ್ಳುವುದಕ್ಕೆ ತಕ್ಕ ಏರ್ಪಾಡುಗಳನ್ನು ಮಾಡುವುದು. ಕನ್ನಡ ಮಾತನ್ನಾಡುವ ಪ್ರದೇಶಗಳಲ್ಲಿ ಸಾಧ್ಯವಾದಷ್ಟು ಸ್ಥಳಗಳಲ್ಲಿ ಕನ್ನಡದ ವಾಚನಾಲಯಗಳನ್ನೂ ಪುಸ್ತಕಭಂಡಾರಗಳನ್ನೂ ಸ್ಥಾಪಿಸುವುದು. ಕನ್ನಡ ನಾಡುಗಳ ಪ್ರಮುಖರನ್ನು ಸೇರಿಸಿ ಸಭೆಗಳನ್ನೇರ್ಪಡಿಸುವುದು, ಮತ್ತು ಸಮರ್ಥರಾದ ವಿದ್ವಾಂಸರಿಂದ ಉಪನ್ಯಾಸಗಳನ್ನು ಮಾಡಿಸುವುದು. ಈವರೆಗಿನ ಸಮ್ಮೇಳನಗಳ ಪಟ್ಟಿ {|class="wikitable sortable" border="1" !ಸಮ್ಮೇಳನದ ಸಂಖ್ಯೆ !ಸಮ್ಮೇಳನ ನಡೆದ ದಿನಾಂಕ, ತಿಂಗಳು ಮತ್ತು ವರ್ಷ !ಸ್ಥಳ !ಅಧ್ಯಕ್ಷತೆ |------ |೧ |೩, ೪, ೫, ೬ ಮೇ ೧೯೧೫ |ಬೆಂಗಳೂರು |ಎಚ್. ವಿ. ನಂಜುಂಡಯ್ಯ |---- |೨ |೬, ೭, ೮ ಮೇ ೧೯೧೬ |ಬೆಂಗಳೂರು |ಎಚ್. ವಿ. ನಂಜುಂಡಯ್ಯ |---- |೩ |೮, ೯, ೧೦ ಜೂನ್ ೧೯೧೭ |ಮೈಸೂರು |ಎಚ್. ವಿ. ನಂಜುಂಡಯ್ಯ |---- |೪ |೧೧, ೧೨, ೧೩ ಮೇ ೧೯೧೮ |ಧಾರವಾಡ |ಆರ್. ನರಸಿಂಹಾಚಾರ್ |---- |೫ |೬, ೭, ೮ ಮೇ ೧೯೧೯ |ಹಾಸನ |ಕರ್ಪೂರ ಶ್ರೀನಿವಾಸರಾವ್ |---- |೬ |೨೦, ೨೧ ಜೂನ್ ೧೯೨೦ |ಹೊಸಪೇಟೆ |ರೊದ್ದ ಶ್ರೀನಿವಾಸರಾವ್ |---- |೭ |೧೯, ೨೦, ೨೧ ಮೇ ೧೯೨೧ |ಚಿಕ್ಕಮಗಳೂರು |ಕೆ. ಪಿ. ಪುಟ್ಟಣ್ಣ ಚೆಟ್ಟಿ |---- |೮ |೧೨, ೧೩ ಮೇ ೧೯೨೨ |ದಾವಣಗೆರೆ |ಎಂ. ವೆಂಕಟಕೃಷ್ಣಯ್ಯ |---- |೯ |೨೧, ೨೨, ೨೩ ಮೇ ೧೯೨೩ |ಬಿಜಾಪುರ |ಸಿದ್ಧಾಂತಿ ಶಿವಶಂಕರ ಶಾಸ್ತ್ರಿ |---- |೧೦ |೧೬, ೧೭, ೧೮ ಮೇ ೧೯೨೪ |ಕೋಲಾರ |ಹೊಸಕೋಟೆ ಕೃಷ್ಣಶಾಸ್ತ್ರಿ |---- |೧೧ |೯, ೧೦, ೧೧ ಮೇ ೧೯೨೫ |ಬೆಳಗಾವಿ |ಬೆನಗಲ್ ರಾಮರಾವ್ |---- |೧೨ |೨೨, ೨೩, ೨೪ ಮೇ ೧೯೨೬ |ಬಳ್ಳಾರಿ |ಫ. ಗು. ಹಳಕಟ್ಟಿ |---- |೧೩ |೧೯, ೨೦, ೨೧ ಮೇ ೧೯೨೭ |ಮಂಗಳೂರು |ಆರ್. ತಾತಾಚಾರ್ಯ |---- |೧೪ |೧, ೨, ೩ ಜೂನ್ ೧೯೨೮ |ಕಲಬುರಗಿ |ಬಿ. ಎಂ. ಶ್ರೀಕಂಠಯ್ಯ |---- |೧೫ |೧೨, ೧೩, ೧೪ ಮೇ ೧೯೨೯ |ಬೆಳಗಾವಿ |ಮಾಸ್ತಿ ವೆಂಕಟೇಶ ಅಯ್ಯಂಗಾರ್ |---- |೧೬ |೫, ೬, ೭ ಅಕ್ಟೋಬರ್ ೧೯೩೦ |ಮೈಸೂರು |ಆಲೂರು ವೆಂಕಟರಾವ್ |---- |೧೭ |೨೮, ೨೯, ೩೦ ಡಿಸೆಂಬರ್ ೧೯೩೧ |ಕಾರವಾರ |ಮುಳಿಯ ತಿಮ್ಮಪ್ಪಯ್ಯ |---- |೧೮ |೨೮, ೨೯, ೩೦ ಡಿಸೆಂಬರ್ ೧೯೩೨ |ಮಡಿಕೇರಿ |ಡಿ. ವಿ. ಗುಂಡಪ್ಪ |---- |೧೯ |೨೯, ೩೦, ೩೧ ಡಿಸೆಂಬರ್ ೧೯೩೩ |ಹುಬ್ಬಳ್ಳಿ |ವೈ. ನಾಗೇಶ ಶಾಸ್ತ್ರಿ |---- |೨೦ |೨೮, ೨೯, ೩೦ ಡಿಸೆಂಬರ್ ೧೯೩೪ |ರಾಯಚೂರು |ಪಂಜೆ ಮಂಗೇಶರಾವ್ |---- |೨೧ |೨೬, ೨೭, ೨೮ ಡಿಸೆಂಬರ್ ೧೯೩೫ |ಮುಂಬೈ |ಎನ್. ಎಸ್. ಸುಬ್ಬರಾವ್ |---- |೨೨ |೨೯, ೩೦, ೩೧ ಡಿಸೆಂಬರ್ ೧೯೩೭ |ಜಮಖಂಡಿ |ಬೆಳ್ಳಾವೆ ವೆಂಕಟನಾರಣಪ್ಪ |---- |೨೩ |೨೯, ೩೦, ೩೧ ಡಿಸೆಂಬರ್ ೧೯೩೮ |ಬಳ್ಳಾರಿ |ರಂಗನಾಥ ದಿವಾಕರ |---- |೨೪ |೨೫, ೨೬, ೨೭, ೨೮ ಡಿಸೆಂಬರ್ ೧೯೩೯ |ಬೆಳಗಾವಿ |ಮುದವೀಡು ಕೃಷ್ಣರಾವ್ |---- |೨೫ |೨೭, ೨೮, ೨೯ ಡಿಸೆಂಬರ್ ೧೯೪೦ |ಧಾರವಾಡ |ವೈ. ಚಂದ್ರಶೇಖರ ಶಾಸ್ತ್ರಿ |---- |೨೬ |೨೭, ೨೮, ೨೯ ಡಿಸೆಂಬರ್ ೧೯೪೧ |ಹೈದರಾಬಾದ್ |ಎ. ಆರ್. ಕೃಷ್ಣಶಾಸ್ತ್ರಿ |---- |೨೭ |೨೬, ೨೭, ೨೮ ಜನವರಿ ೧೯೪೩ |ಶಿವಮೊಗ್ಗ |ದ. ರಾ. ಬೇಂದ್ರೆ |---- |೨೮ |೨೮, ೨೯, ೩೦ ಡಿಸೆಂಬರ್ ೧೯೪೪ |ರಬಕವಿ |ಶಿ. ಶಿ. ಬಸವನಾಳ |---- |೨೯ |೨೬, ೨೭, ೨೮ ಡಿಸೆಂಬರ್ ೧೯೪೫ |ಮದರಾಸು |ಟಿ. ಪಿ. ಕೈಲಾಸಂ |---- |೩೦ |೭, ೮, ೯ ಮೇ ೧೯೪೭ |ಹರಪನಹಳ್ಳಿ |ಸಿ. ಕೆ. ವೆಂಕಟರಾಮಯ್ಯ |---- |೩೧ |೨೯, ೩೦, ೩೧ ಡಿಸೆಂಬರ್ ೧೯೪೮ |ಕಾಸರಗೋಡು |ತಿ. ತಾ. ಶರ್ಮ |---- |೩೨ |೫, ೬, ೭ ಮಾರ್ಚ್ ೧೯೪೯ |ಕಲಬುರಗಿ |ಉತ್ತಂಗಿ ಚನ್ನಪ್ಪ |---- |೩೩ |೨೪, ೨೫, ೨೬ ಮೇ ೧೯೫೦ |ಸೊಲ್ಲಾಪುರ |ಎಂ. ಆರ್. ಶ್ರೀನಿವಾಸಮೂರ್ತಿ |---- |೩೪ |೨೬, ೨೭, ೨೮ ಡಿಸೆಂಬರ್ ೧೯೫೧ |ಮುಂಬೈ |ಗೋವಿಂದ ಪೈ |---- |೩೫ |೧೬, ೧೭, ೧೮ ಮೇ ೧೯೫೨ |ಬೇಲೂರು |ಶಿ. ಚ. ನಂದೀಮಠ |---- |೩೬ |೨೬, ೨೭, ೨೮ ಡಿಸೆಂಬರ್ ೧೯೫೪ |ಕುಮಟಾ |ವಿ. ಸೀತಾರಾಮಯ್ಯ |---- |೩೭ |೧೦, ೧೧, ೧೨ ಜೂನ್ ೧೯೫೫ |ಮೈಸೂರು |ಶಿವರಾಮ ಕಾರಂತ |---- |೩೮ |೨೫, ೨೬, ೨೭ ಡಿಸೆಂಬರ್ ೧೯೫೬ |ರಾಯಚೂರು |ಆದ್ಯ ರಂಗಾಚಾರ್ಯ |---- |೩೯ |೭, ೮, ೯ ಮೇ ೧೯೫೭ |ಧಾರವಾಡ |ಕುವೆಂಪು |---- |೪೦ |೧೮, ೧೯, ೨೦ ಜನವರಿ ೧೯೫೮ |ಬಳ್ಳಾರಿ |ವಿ. ಕೃ. ಗೋಕಾಕ |---- |೪೧ |೧೧, ೧೨, ೧೩ ಫೆಬ್ರವರಿ ೧೯೬೦ |ಬೀದರ್ |ಡಿ. ಎಲ್. ನರಸಿಂಹಾಚಾರ್ |---- |೪೨ |೨೭, ೨೮, ೨೯ ಡಿಸೆಂಬರ್ ೧೯೬೦ |ಮಣಿಪಾಲ |ಅ. ನ. ಕೃಷ್ಣರಾಯ |---- |೪೩ |೨೭, ೨೮, ೨೯ ಡಿಸೆಂಬರ್ ೧೯೬೧ |ಗದಗ |ಕೆ. ಜಿ. ಕುಂದಣಗಾರ |---- |೪೪ |೨೮, ೨೯, ೩೦ ಡಿಸೆಂಬರ್ ೧೯೬೩ |ಸಿದ್ದಗಂಗಾ |ರಂ. ಶ್ರೀ. ಮುಗಳಿ |---- |೪೫ |೧೦, ೧೧, ೧೨ ಮೇ ೧೯೬೫ |ಕಾರವಾರ |ಕಡೆಂಗೋಡ್ಲು ಶಂಕರಭಟ್ಟ |---- |೪೬ |೨೬, ೨೭, ೨೮ ಮೇ ೧೯೬೭ |ಶ್ರವಣಬೆಳಗೊಳ |ಆ. ನೇ. ಉಪಾಧ್ಯೆ |---- |೪೭ |೨೭, ೨೮, ೨೯ ಡಿಸೆಂಬರ್ ೧೯೭೦ |ಬೆಂಗಳೂರು |ದೇ. ಜವರೇಗೌಡ |---- |೪೮ |೩೧ ಮೇ, ೧, ೨ ಜೂನ್ ೧೯೭೪ |ಮಂಡ್ಯ |ಜಯದೇವಿತಾಯಿ ಲಿಗಾಡೆ |---- |೪೯ |೧೧, ೧೨, ೧೩ ಡಿಸೆಂಬರ್ ೧೯೭೬ |ಶಿವಮೊಗ್ಗ |ಎಸ್. ವಿ. ರಂಗಣ್ಣ |---- |೫೦ |೨೩, ೨೪, ೨೫ ಏಪ್ರಿಲ್ ೧೯೭೮ |ದೆಹಲಿ |ಜಿ. ಪಿ. ರಾಜರತ್ನಂ |---- |೫೧ |೦೯, ೧೦, ೧೧ ಮಾರ್ಚ್ ೧೯೭೯ |ಧರ್ಮಸ್ಥಳ |ಗೋಪಾಲಕೃಷ್ಣ ಅಡಿಗ |---- |೫೨ |೭, ೮, ೯, ೧೦ ಫೆಬ್ರವರಿ ೧೯೮೦ |ಬೆಳಗಾವಿ |ಬಸವರಾಜ ಕಟ್ಟೀಮನಿ |---- |೫೩ |೧೩, ೧೪, ೧೫ ಮಾರ್ಚ್ ೧೯೮೧ |ಚಿಕ್ಕಮಗಳೂರು |ಪು. ತಿ. ನರಸಿಂಹಾಚಾರ್ |---- |೫೪ |೨೭, ೨೮, ೨೯, ೩೦ ನವೆಂಬರ್ ೧೯೮೧ |ಮಡಿಕೇರಿ |ಶಂ. ಬಾ. ಜೋಶಿ |---- |೫೫ |೨೩, ೨೪, ೨೫, ೨೬ ಡಿಸೆಂಬರ್ ೧೯೮೨ |ಸಿರ್ಸಿ |ಗೊರೂರು ರಾಮಸ್ವಾಮಿ ಅಯ್ಯಂಗಾರ್ |---- |೫೬ |೨೩, ೨೪, ೨೫ ಮಾರ್ಚ್ ೧೯೮೪ |ಕೈವಾರ |ಎ. ಎನ್. ಮೂರ್ತಿರಾವ್ |---- |೫೭ |೫, ೬, ೭ ಏಪ್ರಿಲ್ ೧೯೮೫ |ಬೀದರ್ |ಹಾ. ಮಾ. ನಾಯಕ |---- |೫೮ |೨೯, ೩೦, ೩೧ ಅಕ್ಟೋಬರ್, ೧ ನವೆಂಬರ್ ೧೯೮೭ |ಕಲಬುರಗಿ |ಸಿದ್ಧಯ್ಯ ಪುರಾಣಿಕ |---- |೫೯ |೧೬, ೧೭, ೧೮ ಫೆಬ್ರವರಿ ೧೯೯೦ |ಹುಬ್ಬಳ್ಳಿ |ಆರ್. ಸಿ. ಹಿರೇಮಠ |---- |೬೦ |೨೮, ೨೯, ೩೦ ನವೆಂಬರ್ ೧೯೯೦ |ಮೈಸೂರು |ಕೆ. ಎಸ್. ನರಸಿಂಹಸ್ವಾಮಿ |---- |೬೧ |೯, ೧೦, ೧೧, ೧೨ ಜನವರಿ ೧೯೯೨ |ದಾವಣಗೆರೆ |ಜಿ. ಎಸ್. ಶಿವರುದ್ರಪ್ಪ |---- |೬೨ |೫, ೬, ೭ ಫೆಬ್ರವರಿ ೧೯೯೩ |ಕೊಪ್ಪಳ |ಸಿಂಪಿ ಲಿಂಗಣ್ಣ |---- |೬೩ |೧೧, ೧೨, ೧೩ ಫೆಬ್ರವರಿ ೧೯೯೪ |ಮಂಡ್ಯ |ಚದುರಂಗ |---- |೬೪ |೩, ೪, ೫ ಜೂನ್ ೧೯೯೫ |ಮುಧೋಳ |ಎಚ್. ಎಲ್. ನಾಗೇಗೌಡ |---- |೬೫ |೨೧, ೨೨, ೨೩, ೨೪ ಡಿಸೆಂಬರ್ ೧೯೯೬ |ಹಾಸನ |ಚನ್ನವೀರ ಕಣವಿ |---- |೬೬ |೧೧, ೧೨, ೧೩, ೧೪ ಡಿಸೆಂಬರ್ ೧೯೯೭ |ಮಂಗಳೂರು |ಕಯ್ಯಾರ ಕಿಞ್ಞಣ್ಣ ರೈ |---- |೬೭ |೧೧, ೧೨, ೧೩, ೧೪ ಫೆಬ್ರವರಿ ೧೯೯೯ |ಕನಕಪುರ |ಎಸ್. ಎಲ್. ಭೈರಪ್ಪ |---- |೬೮ |೨೪, ೨೫, ೨೬ ಜೂನ್ ೨೦೦೦ |ಬಾಗಲಕೋಟೆ |ಶಾಂತಾದೇವಿ ಮಾಳವಾಡ |---- |೬೯ |೧೫, ೧೬, ೧೭ ಫೆಬ್ರವರಿ ೨೦೦೨ |ತುಮಕೂರು |ಯು. ಆರ್. ಅನಂತಮೂರ್ತಿ |---- |೭೦ |೭, ೮, ೯ ಮಾರ್ಚ್ ೨೦೦೩ |ಬೆಳಗಾವಿ |ಪಾಟೀಲ ಪುಟ್ಟಪ್ಪ |---- |೭೧ |೧೮, ೧೯, ೨೦, ೨೧ ಡಿಸೆಂಬರ್ ೨೦೦೩ |ಮೂಡುಬಿದಿರೆ |ಕಮಲಾ ಹಂಪನಾ |---- |೭೨ |೨೭, ೨೮, ೨೯ ಜನವರಿ ೨೦೦೬ |ಬೀದರ್ |ಶಾಂತರಸ ಹೆಂಬೆರಳು |---- |೭೩ |೨೦, ೨೧, ೨೨, ೨೩ ಡಿಸೆಂಬರ್ ೨೦೦೭ |ಶಿವಮೊಗ್ಗ |ಕೆ. ಎಸ್. ನಿಸಾರ್ ಅಹಮ್ಮದ್ |---- |೭೪ |೧೨, ೧೩, ೧೪, ೧೫ ಡಿಸೆಂಬರ್ ೨೦೦೭ |ಉಡುಪಿ |ಎಲ್. ಎಸ್. ಶೇಷಗಿರಿ ರಾವ್ |---- |೭೫ |೪, ೫, ೬ ಫೆಬ್ರವರಿ ೨೦೦೯ |ಚಿತ್ರದುರ್ಗ |ಎಲ್. ಬಸವರಾಜು |---- |೭೬ |೧೯, ೨೦, ೨೧ ಫೆಬ್ರವರಿ ೨೦೧೦ |ಗದಗ |ಗೀತಾ ನಾಗಭೂಷಣ |---- |೭೭ |೪, ೫, ೬ ಫೆಬ್ರವರಿ ೨೦೧೧ |ಬೆಂಗಳೂರು |ಜಿ. ವೆಂಕಟಸುಬ್ಬಯ್ಯ |---- |೭೮ |೯, ೧೦, ೧೧ ಡಿಸೆಂಬರ್ ೨೦೧೧ |ಗಂಗಾವತಿ |ಸಿ. ಪಿ. ಕೃಷ್ಣಕುಮಾರ್ |---- |೭೯ |೯, ೧೦, ೧೧ ಫೆಬ್ರವರಿ ೨೦೧೩ |ಬಿಜಾಪುರ |ಕೋ. ಚೆನ್ನಬಸಪ್ಪ |---- |೮೦ |೭, ೮, ೯ ಜನವರಿ ೨೦೧೪ |ಕೊಡಗು |ನಾ. ಡಿಸೋಜಾ |---- |೮೧ |೩೧ ಜನವರಿ, ೧, ೨, ೩ ಫೆಬ್ರವರಿ ೨೦೧೫ |ಶ್ರವಣಬೆಳಗೊಳ |ಸಿದ್ಧಲಿಂಗಯ್ಯ |---- |೮೨ |೨, ೩, ೪ ಡಿಸೆಂಬರ್ ೨೦೧೬ |ರಾಯಚೂರು |ಬರಗೂರು ರಾಮಚಂದ್ರಪ್ಪ |---- |೮೩ |೨೪, ೨೫, ೨೬ ನವೆಂಬರ್ ೨೦೧೭ |ಮೈಸೂರು |ಚಂದ್ರಶೇಖರ ಪಾಟೀಲ |---- |೮೪ |೪, ೫, ೬ ಜನವರಿ ೨೦೧೯ |ಧಾರವಾಡ |ಚಂದ್ರಶೇಖರ ಕಂಬಾರ |---- |೮೫ |೫, ೬, ೭ ಫೆಬ್ರವರಿ ೨೦೨೦ |ಕಲಬುರಗಿ |ಎಚ್. ಎಸ್. ವೆಂಕಟೇಶಮೂರ್ತಿ |---- |೮೬ |೬, ೭, ೮ ಜನವರಿ ೨೦೨೩ |ಹಾವೇರಿ |ದೊಡ್ಡರಂಗೇಗೌಡ |---- |೮೭ |ನಿಗದಿಸಿಲ್ಲ |ಮಂಡ್ಯ |ನಿಯೋಜಿಸಿಲ್ಲ |---- ಉಲ್ಲೇಖಗಳು ಹೊರ ಕೊಂಡಿಗಳು ಸಚಿತ್ರ ಸಮ್ಮೇಳನ ಬರಗೂರರ ಅಧ್ಯಕ್ಷ ಭಾಷಣ:2 Dec, 2016:[] ಕನ್ನಡ ಸಾಹಿತ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು
977
https://kn.wikipedia.org/wiki/%E0%B2%A6%E0%B2%BE%E0%B2%B5%E0%B2%A3%E0%B2%97%E0%B3%86%E0%B2%B0%E0%B3%86
ದಾವಣಗೆರೆ
ದಾವಣಗೆರೆ - ಕರ್ನಾಟಕ ರಾಜ್ಯದ ಮಧ್ಯ ಕರ್ನಾಟಕದ ಪ್ರಮುಖ ಜಿಲ್ಲೆ. ದಾವಣಗೆರೆ ಜವಳಿ ಉದ್ಯಮಕ್ಕೆ ಜನಪ್ರಿಯ. ಇಲ್ಲಿನ ದಾವಣಗೆರೆ ಕಾಟನ್ ಮಿಲ್ಸ್ ಬಹಳ ಜನಪ್ರಿಯವಾಗಿದ್ದ ಹೆಸರು. ಅಲ್ಲದೆ, ಬೆಣ್ಣೆದೋಸೆಗೆ ದಾವಣಗೆರೆ ಪ್ರಸಿದ್ಧವಾಗಿದೆ. ದಾವಣಗೆರೆಯು ಮಧ್ಯ ಕರ್ನಾಟಕದ ಪ್ರಮುಖ ವ್ಯಾಪಾರ ಸ್ಥಳವಾಗಿದ್ದು, ಇಲ್ಲಿ ಹತ್ತಿ, ಮೆಕ್ಕೆಜೋಳ, ಕಡಲೆ, ಸೂರ್ಯಕಾಂತಿ, ಜೋಳ, ಅಕ್ಕಿ/ಭತ್ತ, ಮತ್ತು ಇತರ ಪ್ರಮುಖ ವಾಣಿಜ್ಯ ಬೆಳೆಗಳನ್ನು ಕರ್ನಾಟಕದ ಇತರ ಜಿಲ್ಲೆಗಳಿಂದ ತಂದು ಮಾರುತ್ತಾರೆ. ದಾವಣಗೆರೆ ಇತ್ತೀಚೆಗೆ ರಾಜ್ಯದ ಪ್ರಮುಖ ವಿದ್ಯಾಕೇಂದ್ರವಾಗಿ ಬೆಳೆದಿದ್ದು, ಇಲ್ಲಿ ಚಿತ್ರಕಲೆ, ವಸ್ತ್ರ ವಿನ್ಯಾಸ ಶಾಸ್ತ್ರ , ಎಂಜಿನಿಯರಿಂಗ್ (ಅಭಿಯಂತರ ಶಾಸ್ತ್ರ), ವೈದ್ಯಕೀಯ, ಕಲೆ, ವಾಣಿಜ್ಯ ಹಾಗು ಇತರ ವಿದ್ಯಾ ವಿಭಾಗಗಳನ್ನು ಹೊಂದಿರುವ ಮಹಾವಿದ್ಯಾಲಯಗಳಿವೆ. ಆರು ತಾಲೂಕುಗಳನ್ನು ಹೊಂದಿದೆ ದಾವಣಗೆರೆ ಹರಿಹರ ಜಗಳೂರು ಹೊನ್ನಾಳಿ ನ್ಯಾಮತಿ ಚನ್ನಗಿರಿ ಭೂಗೋಳ ಶಿವಮೊಗ್ಗ, ಚಿತ್ರದುರ್ಗ, ಹಾವೇರಿ ಚಿಕ್ಕಮಗಳೂರುಮತ್ತು ಬಳ್ಳಾರಿ ಜಿಲ್ಲೆಗಳಿಂದ ಸುತ್ತುವರೆದ ಈ ಊರು, ಪ್ರಮುಖ ಪ್ರದೇಶ. ಬೆಂಗಳೂರಿನಿಂದ ಮುಂಬೈಗೆ ಹೋಗುವ ಯಾತ್ರಿಕರು ದಾವಣಗೆರೆ ಮೂಲಕವೇ ಹೋಗಬೇಕು. ದಾವಣಗೆರೆಯು ಕರ್ನಾಟಕದ ಹೃದಯಭಾಗದಲ್ಲಿ 14° 28’ ರೇಖಾಂಶ ಮತ್ತು 75° 59’ ಅಕ್ಷಾಂಶದಲ್ಲಿದ್ದು ಸಮುದ್ರ ಮಟ್ಟದಿಂದ 602.5 ಮೀ ಎತ್ತರದಲ್ಲಿದೆ. ದಾವಣಗೆರೆ ಜಿಲ್ಲೆಯ ತಾಲೂಕುಗಳನ್ನು ತೋರಿಸುವ ನಕ್ಷೆ ದಾವಣಗೆರೆ ಹರಿಹರ ಜಗಳೂರು ಹೊನ್ನಾಳಿ ಚನ್ನಗಿರಿ ನ್ಯಾಮತಿ ಇತಿಹಾಸ 1997 ನೇ ಇಸವಿಯಲ್ಲಿ ಅಂದಿನ ಮುಖ್ಯಮಂತ್ರಿ ಜೆ.ಹೆಚ್.ಪಟೇಲ್‌, ದಾವಣಗೆರೆಯನ್ನು ಸ್ವತಂತ್ರ ಜಿಲ್ಲೆಯಾಗಿ ಮಾರ್ಪಡಿಸಿದರು. ಇದಕ್ಕೂ ಮೊದಲು ದಾವಣಗೆರೆಯು ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುಗಳಲ್ಲೊಂದಾಗಿತ್ತು. ದಾವಣಗೆರೆ ಜಿಲ್ಲೆಯು ಆರು ತಾಲ್ಲೂಕುಗಳಿಂದ ಕೂಡಿದ್ದು ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರಗಳಲ್ಲಿ ಒಂದೆಂದು ಪರಿಗಣಿಸಲ್ಪಡುತ್ತದೆ. ಪ್ರೇಕ್ಷಣೀಯ ಸ್ಥಳಗಳು Gadde Rameshwara Temple Kuruva ಕುಂದವಾಡ ಕೆರೆ ಶಾಂತಿಸಾಗರ (ಸೂಳೆಕೆರೆ) - ಏಷ್ಯಾ ಖಂಡದ ಎರಡನೇ ಅತಿ ದೊಡ್ಡ ಕೆರೆ. ಭಾರತದಲ್ಲಿಯೆ ಅತಿ ದೊಡ್ಡ ಗ್ಲಾಸ್ ಹೌಸ್ ಹರಪನಹಳ್ಳಿ ತಾಲೂಕು ಬಾಗಳಿ ಕಲ್ಲೇಶ್ವರ ಸ್ವಾಮಿ ದೇವಾಲಯ. ನೀಲಗುಂದ ಭೀಮೇಶ್ವರ ದೇವಾಲಯ ಲಕ್ಕಮುತ್ತೇನಹಳ್ಳಿಯ ಹತ್ತಿರದ ನೀರ್ಥಡಿ ಶ್ರೀ ರಂಗನಾಥ ಸ್ವಾಮಿ ದೆವಾಲಯ(ಚಿತ್ರದುರ್ಗದ ಪಾಳೇಗಾರರ ಕಾಲದ್ದು ೧೬ನೇ ಶತಮಾನ) ಚಿಗಟೇರಿ ಶಿವನಾರದಮುನಿ ದೇವಸ್ತಾನ ಕೊಂಡಜ್ಜಿ ಕೆರೆ ಹರಿಹರ ಸಂಗಮ ಕ್ಷೇತ್ರ. ಹರಿಹರದ ಹರಿಹರೇಶ್ವರ ದೇವಾಲಯ (೧೨ನೇ ಶತಮಾನ, ಚಾಲುಕ್ಯರ ಕಾಲ) ಚನ್ನಗಿರಿಯ ಕೆಳದಿ ಚನ್ನಮ್ಮಾಜಿ ಕಟ್ಟಿದ ಕೋಟೆ ಚನ್ನಗಿರಿ ತಾಲ್ಲೂಕಿನ ಪುಣ್ಯಸ್ಥಳದ ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನ. ಚನ್ನಗಿರಿ ತಾಲೂಕಿನ ಹೋದಿಗೆರೆಯಲ್ಲಿ ಇರುವ ಷಾಜಿ ರಾಜೆ ಬೋಸ್ಲೆ ರವರ(ಶಿವಾಜಿ ಮಹಾರಾಜರ ತಂದೆ) ಸಮಾಧಿ. ಮಾಯಕೊಂಡದಲ್ಲಿನ ಶ್ರೀ ಹಿರೇಮದಕರಿ ನಾಯಕರ ಸಮಾಧಿ. ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಪ್ರಾಣಿ ಸಂಗ್ರಹಾಲಯ. ನೀರ್ಥಡಿಯ ಪುರಾತನ ರಂಗನಾಥ ಸ್ವಾಮಿ ದೇವಸ್ಥಾನ - ನರಗನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನ ಶಾಬನೂರಿನ (ಶಾಮನೂರು) ಕೋಟೆ ಪ್ರದೇಶದ ಜೈನ ತೀರ್ಥಂಕರ ಬಸದಿ ಬೇತೂರಿನ ಹಳೆಯ ಶ್ರೀ ಕಲ್ಲೆಶ್ವರ ಸ್ವಾಮಿ ದೇವಸ್ಥಾನ ಬೇತೂರಿನ ಜೈನ ತೀರ್ಥಂಕರ ಮೂರ್ತಿಗಳು ಕೊಮಾರನಹಳ್ಳಿಯ ಪ್ರಸಿದ್ಧವಾದ ಹೆಳವನಕಟ್ಟೆ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ. ಚಿಗಟೆರಿ ಶಿವನಾರದಮುನಿ ದೇವಸ್ತಾನ . ಹರಿಹರದ ತುಂಗಭದ್ರೆ ಕೊಂಡಜ್ಜಿಯ ಅರಣ್ಯಧಾಮ ಉಕ್ಕಡಗಾತ್ರಿ ಕರಿಬಸವೇಶ್ವರ, ಅಜ್ಜಯ್ಯ ದೇವಾಲಯ, ನಂದಿಗುಡಿ ವೃಷಭಮಠ ಸಂತೇಬೆನ್ನೂರಿನ ಪುಷ್ಕರಿಣಿ. ದೊಡ್ಡಬಾತಿ ಪವಿತ್ರವನ. ನ್ಯಾಮತಿ ತಾಲೂಕು ತೀರ್ಥರಾಮೇಶ್ವರ ಗೋವಿನಕೋವಿ ಮಠ ಕಣಿವೆ ವೀರಭದ್ರೇಶ್ವರ ದೇವಸ್ಥಾನ ಸವಳಂಗ ಅತಿ ದೊಡ್ಡದಾದ ಕೆರೆ ನ್ಯಾಮತಿ ನಗರದ ಬನಶಂಕರಿ ದೇವಾಲಯ ನ್ಯಾಮತಿ ನಗರದ ಪೇಟೆ ಬಸವೇಶ್ವರ ದೇವಾಲಯ ಚಿನ್ನಿಕಟ್ಟೆ ರುದ್ರಸ್ವಾಮಿ ಮಠ ಕಂಚಿಕೆರೆ ಗ್ರಾಮದ '''''ಶ್ರೀ ಕೋಡಿ ಸಿದ್ದೇಶ್ವರ ಮತ್ತು ಶ್ರೀ ಮದಗಾಂಭಿಕ ದೇವಿ ಪ್ರಾದೇಶಿಕ ದಾವಣಗೆರೆ ಮೊದಲು ಚಿತ್ರದುರ್ಗ ಜಿಲ್ಲೆಗೆ ಸೇರಿತ್ತು. ಆಗಸ್ಟ್ ೧೫, ೧೯೯೭ರಂದು ಅಂದಿನ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ಅವರ ನಿರ್ಧಾರದ ಮೇರೆಗೆ ಚಿತ್ರದುರ್ಗ ಜಿಲ್ಲೆಯಿಂದ ದಾವಣಗೆರೆ, ಹರಿಹರ, ಮತ್ತು ಜಗಳೂರು ತಾಲ್ಲೂಕುಗಳನ್ನು, ಶಿವಮೊಗ್ಗ ಜಿಲ್ಲೆಯಿಂದ ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕುಗಳನ್ನು, ಹಾಗೂ ಬಳ್ಳಾರಿ ಜಿಲ್ಲೆಯಿಂದ ಹರಪನಹಳ್ಳಿ ತಾಲ್ಲೂಕುಗಳನ್ನು ಸೇರಿಸಿ ಹೊಸ ದಾವಣಗೆರೆ ಜಿಲ್ಲೆಯನ್ನು ರಚಿಸಲಾಯಿತು. ೨೦೧೯ರಲ್ಲಿ ಹರಪನಹಳ್ಳಿ ತಾಲೂಕನ್ನು, ತಾಲೂಕಿನ ಜನರ ಆಶಯದ ಮೇರೆಗೆ ಬಳ್ಳಾರಿ ಜಿಲ್ಲೆಗೆ ಸೇರಿಸಲಾಯಿತು. ದಾವಣಗೆರೆಯ ಆಹಾರ ವೈಶಿಷ್ಟ್ಯ ದಾವಣಗೆರೆ ಮಧ್ಯ ಕರ್ನಾಟಕದ ನಗರವಾಗಿರುವುದರಿಂದ ಇದು ಉತ್ತರ ಮತ್ತು ದಕ್ಷಿಣ ಕರ್ನಾಟಕದ ಆಹಾರ ವೈಶಿಷ್ಟ್ಯಗಳ ಅನನ್ಯ ಸಂಗಮವಾಗಿದೆ. ದಾವಣಗೆರೆಯಲ್ಲಿ ಪ್ರಮುಖವಾಗಿ ಉತ್ತರ ಕರ್ನಾಟಕದ,ಜೋಳದ ರೊಟ್ಟಿ, ಶೇಂಗಾ ಚಟ್ನಿ ಪುಡಿ,ಕುರಶನಿ(ಗುರೆಳ್ಳು, ಹುಚ್ಚೆಳ್ಲು)ಪುಡಿ ಹೊಂದಿರುವ ಆಹಾರ ತಿನಿಸುಗಳೂ ದೊರೆಯುತ್ತವೆ.ಮತ್ತು ಬಳಸಲಾಗುತ್ತದೆ ಮತ್ತು ದಕ್ಷಿಣ ಕರ್ನಾಟಕದ(ಮೈಸೂರು ಪ್ರಾಂತ್ಯದ) ರಾಗಿ ಮುದ್ದೆಗಳೂ ಇಲ್ಲಿನ ಆಹಾರ ಪದಾರ್ಥಗಳಾಗಿವೆ. ರೊಟ್ಟಿಯೊಂದಿಗೆ ಅನ್ನವೂ ಬಳಸಲ್ಪಡುತ್ತದೆ. ದೋಸೆ(ಹಲವು ಪ್ರಕಾರಗಳನ್ನು ಕೆಳಗೆ ವರ್ಗೀಕರಿಸಲಾಗಿದೆ) ಒಂದು ವಿಶಿಷ್ಟ ತಿನಿಸಾಗಿದೆ. ದಾವಣಗೆರೆ ಬೆಣ್ಣೆ ದೋಸೆ ವಿಶ್ವದಲ್ಲೇ ಪ್ರಸಿದ್ಧಿ ಹೊಂದಿದೆ ಮತ್ತು ಇಲ್ಲಿನ ವಿಶಿಷ್ಟ. ಮಿರ್ಚಿ ಮಂಡಕ್ಕಿ ತವರೂರಾಗಿದೆ. ಸಿಹಿ ತಿನಿಸಾದ ಗುಳ್ಳಡಿಕಿ ಉಂಡಿ ದಾವಣಗೆರೆಯಲ್ಲಿ ಮಾತ್ರ ಮಾಡಲಾಗುತ್ತದೆ ಮತ್ತು ಇಲ್ಲಿ ಮಾತ್ರ ದೊರೆಯುತ್ತದೆ... ದಾವಣಗೆರೆಯ ವಾಣಿಜ್ಯ ದಾವಣಗೆರೆ ಪಟ್ಟಣ ಮಧ್ಯ ಕರ್ನಾಟಕದ ಪ್ರಮುಖ ವ್ಯಾಪಾರ ಕೇಂದ್ರವಾಗಿದೆ. ಇದು ಅನೇಕ ಹತ್ತಿ ಗಿರಣಿಗಳು ಮತ್ತು ಬಟ್ಟೆ ವ್ಯಾಪಾರ ಸಂಸ್ಥೆಗಳು "ಕರ್ನಾಟಕದ ಮ್ಯಾಂಚೆಸ್ಟರ್" ಎಂದು ಶ್ಲಾಘಿಸಿದರು. ಇದು ರಾಜ್ಯ ಕೇಂದ್ರದಲ್ಲಿ ಭೌಗೋಳಿಕ ಸ್ಥಳ ಮತ್ತು ಉತ್ತಮ ರೈಲು, ರಸ್ತೆ ಸಂಪರ್ಕ ವಹಿವಾಟಿಗೆ ಸಾಕಷ್ಟು ಅವಕಾಶಗಳನ್ನು ಒದಗಿಸುತ್ತದೆ. . ದಾವಣಗೆರೆ ಜಿಲ್ಲಾ ಅರ್ಧದಷ್ಟು ಭದ್ರ ಜಲಾಶಯ ನೀರಾವರಿ. ಅಕ್ಕಿ, ಅಡಿಕೆ, ಮೆಕ್ಕೆಜೋಳ ಮತ್ತು ಹತ್ತಿ ಅನೇಕ ಶ್ರೀಮಂತ ನಗದು ಮತ್ತು ಆಹಾರ ಬೆಳೆಗಳನ್ನು. ಇಲ್ಲಿ ವ್ಯಾಪಾರ [8] ಪ್ರಸ್ತುತ ದಾವಣಗೆರೆ ಸುಮಾರು ಪ್ರಮುಖ ಕೃಷಿ ಕೈಗಾರಿಕಾ ಚಟುವಟಿಕೆ ಮತ್ತು ಈ ಪ್ರದೇಶದಲ್ಲಿ ಸುಮಾರು ಸಕ್ಕರೆ ಮಿಲ್ಲುಗಳು ಜೊತೆಗೆ, ಅಕ್ಕಿ ಮತ್ತು ಕಬ್ಬು ಬೆಳೆಸಬಹುದು. ದಾವಣಗೆರೆ ಬಳಿ ದುಗ್ಗಾವತಿ ಗ್ರಾಮದಲ್ಲಿದೆ. ಶುಗರ್ ಮಿಲ್ಸ್ ಅಸ್ತಿತ್ವದಲ್ಲಿವೆ ಮತ್ತು ದಾವಣಗೆರೆಯ ಪ್ರಮುಖ ಉದ್ಯಮವಾಗಿದೆ. ಅಕ್ಕಿ ಗಿರಣಿಗಳು ಅನೇಕ ಬೈಪಾಸ್ ರಸ್ತೆಯ ಬಳಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ. ಮತ್ತು ಈ ಪಟ್ಟಣದ ಸುತ್ತ ಮಂಡಕ್ಕಿ ಸುತ್ತಿಸಿ ಅಕ್ಕಿ ಮಾಡುವ ಅನೇಕ ಅಕ್ಕಿ ಗಿರಣಿಗಳು ಇವೆ. ದಾವಣಗೆರೆ ಬಟ್ಟೆ ಗಿರಣ ಪ್ರಸಿದ್ಧವಾಗಿದೆ. ಶಂಕರ್ ಟೆಕ್ಸ್ಟೈಲ್ಸ್ ಮಿಲ್ಸ್, ಹತ್ತಿ ವುಲನ್ ಮತ್ತು ಸಿಲ್ಕ್ ಮಿಲ್ಸ್ ಲಿ, ಎಲ್ಲಾ ನಗರದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ. ಇಲ್ಲಿಯವರೆಗೆ ಅಸ್ತಿತ್ವದಲ್ಲಿರುವ ಹತ್ತಿ ಗಿರಣಿಗಳು: ಆಂಜನೇಯ ಕಾಟನ್ ಮಿಲ್, ಗಣೇಶ್ ಮಿಲ್, ಮತ್ತು ಸಿದ್ದೇಶ್ವರ ಕಾಟನ್ ಮಿಲ್. ದಾವಣಗೆರೆ 1980 ರವರೆಗೆ 1960 ರ ಪ್ರಮುಖ ಹತ್ತಿ ಬಟ್ಟೆಯ ರಫ್ತು. ಆದರೆ ಗಿರಣಿಗಳ 1990 ರ ಮುಚ್ಚಲಾಯಿತು. ದಾವಣಗೆರೆ ದೊಡ್ಡ ವಸ್ತ್ರ ಅಥವಾ ಬಟ್ಟೆ ಅಂಗಡಿ, ಅಂದರೆ ಬಿ.ಎಸ್ ಚನ್ನಬಸಪ್ಪ ಮತ್ತು ಸನ್ಸ್. ತನ್ನ ಶಾಖೆಗಳನ್ನು ನಗರದಲ್ಲಿ ಹರಡಿದೆ ಇದು ಮಧ್ಯ ಕರ್ನಾಟಕದ ದೊಡ್ಡ ಬಟ್ಟೆಯ ಅಂಗಡಿಯಲ್ಲಿ ಒಂದು.ಹರಿಹರ ನಲ್ಲಿ ವಿಸ್ಕೋಸ್ ಸ್ಟೇಪಲ್ ಫೈಬರ್ಸ್ (ಎಂಬ ಹರಿಹರ ಪಾಲಿ ಫೈಬರ್ಸ್ & Grasilene ವಿಭಾಗ) ವಿಶ್ವದ ಎರಡನೇ ದೊಡ್ಡ ತಯಾರಕ ಇದು ಆದಿತ್ಯ ಬಿರ್ಲಾ ಗ್ರೂಪ್ ಸಂಸ್ಥೆ ಗ್ರಾಸಿಮ್ ಇಂಡಸ್ಟ್ರೀಸ್ ತಯಾರಿಕಾ ಘಟಕವನ್ನು ಹೊಂದಿದೆ ಹಾಗೆಯೆ ಹರಿಹರ ಹತ್ತಿರ ಇರುವ ಬೆಳ್ಳೂಡಿ ಕೈಗಾರಿಕಾ ಪ್ರದೇಶದ ಹತ್ತಿರ ಕಾರ್ಗಿಲ್ ಇಂಡಿಯಾ ಸಂಸ್ಥೆಯು ಗ್ಲೂಕೋಸ್ ಮತ್ತು ಕೃಷಿ ಸಂಭಂದಿಸಿದ ವಸ್ತುಗಳ ತಯಾರಿಕಾ ಘಟಕವನ್ನು ಸ್ಥಾಪಿಸಿದೆ ಶೀಗ್ರದಲ್ಲೆ ಘಟಕವು ಕಾರ್ಯನಿರ್ವಹಿಸುವುದು. ನ್ಯಾಮತಿ ಯಲ್ಲಿ ಅತಿ ಹೆಚ್ಚು ತರಕಾರಿ ಬೆಳೆಗಳನ್ನು ಬೆಳೆದು ಉಡುಪಿ ಮಂಗಳೂರು ಮಣಿಪಾಲ್ ಚಿಕ್ಕಮಂಗಳೂರು ಬಾಳೆಹೊನ್ನೂರು ಕಳಸ ಮುಂತಾದ ಸ್ಥಳಗಳಿಗೆ ರಫ್ತುು ಮಾಡಲಾಗುತ್ತದೆ. ದಾವಣಗೆರೆಯ ವಿಶಿಷ್ಟ ತಿನಿಸುಗಳು ಬೆಣ್ಣೆದೋಸೆ, ಖಾರ ಮಂಡಕ್ಕಿ, ಓಪನ್ನ್ ಬೆಣ್ಣೆದೋಸೆ, ಮಸಾಲೆ ಬೆಣ್ಣೆದೋಸೆ, ಗುಳ್ಳಡಕಿ ಉಂಡೆ, ಅತ್ತಿಕಾಯಿ, ಹಿಟ್ಟು ಹಚ್ಚಿದ ಮೇಣಸಿನಕಾಯೆ, ನರ್ಗೀಸ್ ಮಂಡಕ್ಕಿ, ಮಸಾಲೆ ಮಂಡಕ್ಕಿ, ಮಸಾಲೆ ಅವಲಕ್ಕಿ ತಾಳಿಪೇಟ್ಟು......... ಪ್ರಮುಖ ವಿದ್ಯಾಸಂಸ್ಥೆಗಳು ದಾವಣಗೆರೆ ವಿಶ್ವವಿದ್ಯಾನಿಲಯ ಮತ್ತು ಸ್ನಾತಕೋತ್ತರ ಕೇಂದ್ರ ಬ್ರಹ್ಮಪ್ಪ ದೇವೇಂದ್ರಪ್ಪ ತವನಪ್ಪನವರ ತಾಂತ್ರಿಕ ಮಹಾವಿದ್ಯಾಲಯ(ಬಿ.ಡಿ.ಟಿ) ಲಲಿತಕಲಾ ಮಹಾವಿದ್ಯಾಲಯ, ಬಾಪೂಜಿ ವಿದ್ಯಾ ಸಂಸ್ಥೆ ಜಗದ್ಗುರು ಜಯದೇವ ಮುರುಘರಾಜೇಂದ್ರ ವೈದ್ಯಕೀಯ ಮಹಾವಿದ್ಯಾಲಯ(ಜೆ.ಜೆ.ಎಂ) ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ(ಬಿ.ಐ.ಇ.ಟಿ) ಜಿ ಮಲ್ಲಿಕಾರ್ಜುನಪ್ಪ ತಾಂತ್ರಿಕ ಮಹಾವಿದ್ಯಾಲಯ(ಜಿ.ಎಂ.ಐ.ಟಿ) ಎಸ್.ಎಸ್.ಮೆಡಿಕಲ್ ಕಾಲೇಜು ಬಾಪೂಜಿ ದಂತ ವೈದ್ಯಕೀಯ ಮಹಾವಿದ್ಯಾಲಯ (Dental college) ದಂತವಿಜ್ಞಾನ ಮಹಾವಿದ್ಯಾಲಯ(C.O.D.S) ಕಲಾನೀಕೇತನ ವಸ್ತ್ರವಿನ್ಯಾಸ ಮಹಾವಿದ್ಯಾಲಯ(K.C.F.D) ಧರ್ಮಪ್ರಕಾಶ ರಾಜನಹಳ್ಳಿ ರಾಮಶೆಟ್ಟಿ ಪಾಲಿಟೆಕ್ನಿಕ್(ಡಿ.ಆರ್.ಆರ್) ಧರ್ಮಪ್ರಕಾಶ ರಾಜನಹಳ್ಳಿ ಮದ್ದೂರಾಯಪ್ಪ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯ(ಡಿ.ಆರ್.ಎಂ) ವಿಶ್ವವಿದ್ಯಾನಿಲಯ ಲಲಿತಕಲಾ ಮಹಾವಿದ್ಯಾಲಯ ರಾಜನಹಳ್ಳಿ ಲಕ್ಷ್ಮಣಶೆಟ್ಟಿ ಕಾನೂನು ವಿದ್ಯಾಲಯ ಬಾಪೂಜಿ ವಿದ್ಯಾಸಂಸ್ಥೆಗಳು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ದಾವಣಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಗಳು ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆ ಶ್ರೀ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆ ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್. ದಾವಣಗೆರೆ ವಿದ್ಯಾಸಂಸ್ಥೆ. ಇತರ ತಾಣಗಳು ದಾವಣಗೆರೆ ಮಹಾನಗರ ಪಾಲಿಕೆ ದಾವಣಗೆರೆ ವಿಶ್ವವಿದ್ಯಾನಿಲಯ ದಾವಣಗೆರೆ ದಾವಣಗೆರೆ ಜಿಲ್ಲಾ ರಸ್ತೆ ನಕ್ಷೆ ದಾವಣಗೆರೆ ಜಿಲ್ಲೆಯ ನಕ್ಷೆ ಕರ್ನಾಟಕದ ಜಿಲ್ಲೆಗಳು ದಾವಣಗೆರೆ ದಾವಣಗೆರೆ ಜಿಲ್ಲೆಯ ತಾಲೂಕುಗಳು ಭಾರತದ ಜಿಲ್ಲೆಗಳು
978
https://kn.wikipedia.org/wiki/%E0%B2%9C%E0%B3%86%20%E0%B2%B9%E0%B3%86%E0%B2%9A%E0%B3%8D%20%E0%B2%AA%E0%B2%9F%E0%B3%87%E0%B2%B2%E0%B3%8D
ಜೆ ಹೆಚ್ ಪಟೇಲ್
ಜಯದೇವಪ್ಪ ಹಾಲಪ್ಪ ಪಟೇಲ್ (೧೯೩೦ - ೨೦೦೦) ಕರ್ನಾಟಕದ ಹಿಂದಿನ ಮುಖ್ಯಮಂತ್ರಿಗಳಲ್ಲೊಬ್ಬರು. ಇವರು ಕರ್ನಾಟಕ ಸಂಯುಕ್ತ ಜನತಾ ದಳದ ಅಧ್ಯಕ್ಷರಾಗಿದ್ದು, ದೇವೇಗೌಡರ ನಂತರ ಮುಖ್ಯಮಂತ್ರಿ ಸ್ಥಾನವನ್ನು ಪಡೆದರು. ಸಮಾಜವಾದಿ ಚಳುವಳಿಯಲ್ಲಿ ಗೋಪಾಲ ಗೌಡರ ಜೊತೆಗೆ ಬಾಗವಹಿಸಿದವರಲ್ಲಿ ಇವರೂ ಒಬ್ಬರು. ಇವರು ತುರ್ತು ಪರಿಸ್ಥಿತಿಯಲ್ಲಿ ಹೋರಾಡಿದ ನಾಯಕರಲ್ಲಿ ಒಬ್ಬರು. ಹೊರಗಿನ ಸಂಪರ್ಕಗಳು ಸ್ಮರಣಾರ್ಥ ಅಂತರಜಾಲ ತಾಣ ಕರ್ನಾಟಕದ ಮುಖ್ಯಮಂತ್ರಿಗಳು ಕರ್ನಾಟಕದ ರಾಜಕೀಯ ದಾವಣಗೆರೆಯ ಪ್ರಮುಖ ವ್ಯಕ್ತಿಗಳು ೧೯೩೦ ಜನನ ೨೦೦೦ ನಿಧನ ಕರ್ನಾಟಕದ ವಿಧಾನಸಭಾ ಸದಸ್ಯರು ಕರ್ನಾಟಕದ ಲೋಕ ಸಭೆ ಸದಸ್ಯರುಕರ್ನಾಟಕ ರಾಜಕಾರಣಿಗಳು
981
https://kn.wikipedia.org/wiki/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81%20%E0%B2%B5%E0%B2%BF%E0%B2%B6%E0%B3%8D%E0%B2%B5%E0%B2%B5%E0%B2%BF%E0%B2%A6%E0%B3%8D%E0%B2%AF%E0%B2%BE%E0%B2%B2%E0%B2%AF
ಮೈಸೂರು ವಿಶ್ವವಿದ್ಯಾಲಯ
ಮೈಸೂರು ವಿಶ್ವವಿದ್ಯಾಲಯವು ಭಾರತದ ಒಂದು ಪ್ರಮುಖ ವಿಶ್ವವಿದ್ಯಾಲಯ. ಮೈಸೂರು ವಿಶ್ವವಿದ್ಯಾಲಯ ೩೯ ಇಲಾಖೆಗಳನ್ನು ಹೊಂದಿದೆ. ಒಟ್ಟು ೬೫ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಿ.ಎಚ್.ಡಿ ಪದವಿಗಳನ್ನು ಇಲ್ಲಿ ಪಡೆಯಬಹುದಾಗಿದೆ. ಇತಿಹಾಸ ಮೈಸೂರು ವಿಶ್ವವಿದ್ಯಾಲಯವು ೧೯೧೬ರ ಜುಲೈ ೧೭ರಂದು ಮೈಸೂರಿನ ಆಗಿನ ದಿವಾನರಾಗಿದ್ದ ಸರ್ ಎಂ ವಿಶ್ವೇಶ್ವರಯ್ಯನವರ ದೂರದೃಷ್ಟಿಯ ಫಲವಾಗಿ ಪ್ರಾರಂಭ ವಾದದ್ದು. ಥಾಮಸ್ ಡೆನ್ಹಾಮ್ ಮತ್ತು ಸಿ.ಆರ್.ರೆಡ್ಡಿ ಅವರು, ಅಮೆರಿಕ ಪ್ರವಾಸ ನಂತರ ಸಲ್ಲಿಸಿದ ವರದಿಯ ಆಧಾರದ ಮೇಲೆ ಈ ವಿಶ್ವವಿದ್ಯಾಲಯವನ್ನು ಮಹಾರಾಜರು ಸ್ಥಾಪಿಸಿದರು. ಮುಖ್ಯವಾಗಿ ಷಿಕಾಗೊ ವಿಶ್ವವಿದ್ಯಾಲಯ, ವಿಸ್ಕಾನ್ಸಿನ್ ವಿಶ್ವವಿದ್ಯಾಲಯ, ಆಕ್ಸ್ ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳ ರಚನೆ ಮತ್ತು ಆಡಳಿತಗಳ ಆಳವಾದ ವಿಶ್ಲೇಷಣೆಯ ಮೇಲೆ ಮೈಸೂರು ವಿಶ್ವವಿದ್ಯಾಲಯವನ್ನು ಆಧರಿಸಲಾಯಿತು. ಮೈಸೂರಿನ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರೋತ್ಸಾಹದಿಂದ ವಿಶ್ವವಿದ್ಯಾಲಯವು ಭಾರತದಲ್ಲಿಯೇ ಅಪ್ರತಿಮ ವಿದ್ಯಾ ಕೇಂದ್ರಗಳಲ್ಲಿ ಒಂದೆನಿಸಿತು. ನನಸಾದ ವಿಶ್ವವಿದ್ಯಾನಿಲಯ ಸ್ಥಾಪನೆಯ ಹಿಂದೆ, ಆಧುನಿಕ ಮೈಸೂರು ನಿರ್ಮಾಪಕ ಎಂಬ ಪ್ರಶಂಸೆಗೆ ಪಾತ್ರರಾದ ಸರ್.ಎಂ.ವಿಶ್ವೇಶ್ವರಯ್ಯ ಮತ್ತು ಶಿಕ್ಷಣದ ರೂವಾರಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಣಿಕೆ ಬಹಳ ದೊಡ್ಡದು. ಹೇಮಂತ್ ಕುಮಾರ್ ಪ್ರಸಕ್ತ ಹಂಗಾಮಿ ಉಪಕುಲಪತಿಗಳಾಗಿ ಕಾರ್ಯ ನಿರ್ವಹಿಸುತಿದ್ದಾರೆ. [] ವಿಶ್ವವಿದ್ಯಾನಿಲಯದ ಧ್ಯೇಯವಾಕ್ಯ "ನಹಿ ಜ್ಞಾನೇನ ಸದೃಶಂ" ಎಂಬುದು ಮೈಸೂರು ವಿಶ್ವವಿದ್ಯಾನಿಲಯದ ಧ್ಯೇಯವಾಕ್ಯವಾಗಿದೆ. ಅಂದರೆ ಜ್ಞಾನಕ್ಕೆ ಸಮಾನವಾದದು ಬೇರೆ ಇಲ್ಲ ಎಂದರ್ಥ. ಈ ವಾಕ್ಯವನ್ನು ಭಗವದ್ಗೀತೆಯಿಂದ ಆಯ್ದುಕೊಳ್ಳಲಾಗಿದೆ. ಇದನ್ನು ದೇವನಾಗರಿ ಲಿಪಿ ಯಲ್ಲಿ ಬರೆಯಲಾಗಿದೆ. ಈ ಲಾಂಛನದ ತಳಭಾಗದಲ್ಲಿ 'ಸತ್ಯಮೇವೋದ್ಧರಾಮ್ಯಹಂ' ಎಂಬ ಸಂಸ್ಕೃತ ನುಡಿ ಇದೆ. ಅಂದರೆ- ನಾನು ಯಾವಾಗಲೂ ಸತ್ಯವನ್ನೇ ಎತ್ತಿ ಹಿಡಿಯುತ್ತೇನೆ ಎಂಬುದಾಗಿದೆ. ಪ್ರಚಾರೋಪನ್ಯಾಸ ಮಾಲೆ ೧೯೩೩ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸಾರಾಂಗ ಶುರುವಾಯಿತು. ಬಹುತೇಕ ಶಿಕ್ಷಣತಜ್ಞರ ಪ್ರಕಾರ ಇದು ಮೈಸೂರು ವಿಶ್ವವಿದ್ಯಾನಿಲಯದ ಜೀವನಾಡಿ. ವಿಶ್ವವಿದ್ಯಾನಿಲಯದ ಪ್ರಕಟಣೆಗಳನ್ನು ಹೊರತರುವುದು ಇದರ ಮುಖ್ಯಧ್ಯೇಯ. ಈ ಸಂಸ್ಥೆ ತನ್ನ ನೆಲದ ಅನಕ್ಷರಸ್ಥರಿಗಾಗಿ ಪ್ರಚಾರೋಪನ್ಯಾಸ ಮಾಲೆ ಎಂಬ ವಿಶಿಷ್ಟಸೇವೆಯನ್ನು ಆರಂಭಿಸಿತು. ಈ ಕುರಿತು ಶ್ರೀಯುತ ಕುವೆಂಪು ಅವರ ಮಾತಿನಲ್ಲಿ ಹೇಳುವುದಾದರೆ - 'ದೇಶದಲ್ಲಿರುವ ಎಲ್ಲರೂ ವಿಶ್ವವಿದ್ಯಾನಿಲಯಕ್ಕೆ ಹೋಗಲಾರರಷ್ಟೇ! ಆದರೆ ವಿಶ್ವವಿದ್ಯಾನಿಲಯ ಎಲ್ಲರ ಮನೆ ಬಾಗಿಲಿಗೂ ಹೋಗಬಲ್ಲದು.' ಈ ರೀತಿ ವಿಶ್ವವಿದ್ಯಾನಿಲಯದ ತಜ್ಞರು ಹಳ್ಳಿ ಹಳ್ಳಿಗೆ ತೆರಳಿ, ರೈತಾಪಿ ಜನರಿಗೆ ಉಪನ್ಯಾಸ ನೀಡುವುದು ಹಾಗೂ ಈ ಉಪನ್ಯಾಸವನ್ನು ಕಿರು ಪುಸ್ತಕರೂಪದಲ್ಲಿ ಪ್ರಕಟಿಸಿ, ಅತ್ಯಂತ ಕಡಿಮೆ ಬೆಲೆಯಲ್ಲಿ ಮಾರುವುದಾಗಿದೆ. ಈ ಯೋಜನೆಯ ಉದ್ದೇಶ ದುಡ್ಡು ಮಾಡುವುದಲ್ಲ. ವಿಶ್ವವಿದ್ಯಾನಿಲಯದ ಜನತೆಯ ನಡುವೆ ಜ್ಞಾನ೮ಪ್ರಸಾರ ಮಾಡುವುದು. ಹಾಗಾಗಿ ಆರಂಭದಲ್ಲಿ ಪುಸ್ತಕದ ಮುಖಬೆಲೆ ಎರಡಾಣೆಯಾಗಿತ್ತು. ಇದುವರೆವಿಗೂ ಸಾವಿರಾರು ವಿಷಯಗಳ ಕುರಿತು, ಲಕ್ಷಾಂತರ ಪುಸ್ತಕಗಳು ಬಿಕರಿಯಾಗಿವೆ. ಆಧುನಿಕ ವಿಜ್ಷಾನದ ವಿಷಯಗಳಿಂದ ಹಿಡಿದು, ವೈದ್ಯಕೀಯ ವಿಷಯಗಳು, ಕಣ್ಣು ಮತ್ತು ಅದರ ರಕ್ಷಣೆ, ಹೆರಿಗೆ ಮತ್ತು ಶಿಶುಸಂರಕ್ಷಣೆಯಂಥ ಪುಸ್ತಕಗಳು ಈ ಯೋಜನೆಯಲ್ಲಿ ಪ್ರಕಟವಾಗಿವೆ. ಇದು ೧೯೩೪ ರಲ್ಲಿ ಆಕ್ಸ್ ಫರ್ಢ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯಗಳ ಸಮ್ಮೇಳನದಲ್ಲಿ ಗಮನಸೆಳೆಯಿತು. ಮುಂದೆ ಜಾಗತಿಕವಾಗಿ ' ಮೈಸೂರು ವಿಶ್ವವಿದ್ಯಾನಿಲಯ ಪ್ರಯೋಗ' ಎಂದೇ ಪ್ರಸಿದ್ಧಿಯಾಯಿತು. ಮೈಸೂರು ವಿಶ್ವವಿದ್ಯಾನಿಲಯದ ಧೀಮಂತ ವಿದ್ವಾಂಸರು ಯಾವುದೇ ವಿಶ್ವವಿದ್ಯಾನಿಲಯದ ಗುಣಮಟ್ಟವನ್ನು ಅಲ್ಲಿನ ಸುಂದರವಾದ ಕ್ಯಾಂಪಸ್‍ನಿಂದಾಗಲಿ, ಸೌಲಭ್ಯ-ಸೌಕರ್ಯ, ಕಟ್ಟಡ, ವಾಸ್ತುಶಿಲ್ಪಗಳಿಂದಾಗಲಿ ಅಳೆಯುವುದಿಲ್ಲ. ಬದಲಿಗೆ ಆ ವಿಶ್ವವಿದ್ಯಾನಿಲಯದಲ್ಲಿ ಬೋಧನೆ ಮಾಡಿದ ಅಧ್ಯಾಪಕರು ಹಾಗೂ ವಿಶ್ವವಿದ್ಯಾನಿಲಯ ರೂಪಿಸಿದ ವಿಜ್ಞಾನಿಗಳು, ಕಲಾವಿದರು, ಸಾಹಿತಿಗಳು, ಸಾಧಕರ ಪಟ್ಟಿಯನ್ನು ನೋಡಿ, ವಿಶ್ವವಿದ್ಯಾನಿಲಯದ ಒಳ ಸೌಂದರ್ಯವನ್ನು ಅಳೆಯುತ್ತಾರೆ. ಅಂತೆಯೇ ಮೈಸೂರು ವಿಶ್ವವಿದ್ಯಾನಿಲಯ ಕೂಡ ಬದುಕಿನ ನಾನಾ ವಲಯಗಳಿಗೆ ಶ್ರೇಷ್ಠವಾದ ಮಾನವಸಂಪನ್ಮೂಲವನ್ನು ನೀಡಿದೆ. ಆಡಳಿತ, ಶಿಕ್ಷಣ, ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ, ಕ್ರೀಡೆ, ನಾಟಕ, ಸಂಗೀತ, ಪತ್ರಿಕೋದ್ಯಮ ಹೀಗೆ ವಿವಿಧ ಕ್ಷೇತ್ರದಲ್ಲಿ ಮುಂದಾಳತ್ವ ವಹಿಸಿದ ಸಾವಿರಾರು ಮಂದಿ ವಿದ್ಯಾರ್ಥಿಗಳು, ಅಧ್ಯಾಪಕರು ಇಲ್ಲಿಂದ ಒಡಮೂಡಿದ್ದಾರೆ. ಕುವೆಂಪು, ಕೆ.ಟಿ.ಷಾ, ಡಾ.ಎಸ್.ರಾಧಾಕೃಷ್ಣನ್, ಎಂ.ಹಿರಿಯಣ್ಣ, ಜೆ.ಸಿ.ರೋಲೋ, ಎ.ಆರ್.ವಾಡಿಯಾ, ಸಿ.ಡಿ.ನರಸಿಂಹಯ್ಯ, ಆರ್.ಕೆ.ಲಕ್ಷ್ಮಣ್, ಡಾ.ಜಿ.ಎಸ್.ಶಿವರುದ್ರಪ್ಪ, ಎಂ.ವಿ.ಗೋಪಾಲಸ್ವಾಮಿ, ಡಾ.ಹಾ.ಮಾ.ನಾಯಕ, ದೇಜಗೌ, ಡಾ. ಸಿ. ಎನ್. ಆರ್. ರಾವ್, ನಾರಾಯಣಮೂರ್ತಿ, ಜಾವಗಲ್ ಶ್ರೀನಾಥ್, ಎಸ್.ನಿಜಲಿಂಗಪ್ಪ, ಎಸ್.ಎಂ.ಕೃಷ್ಣ, ಯು.ಆರ್.ಅನಂತಮೂರ್ತಿ, ಎಸ್.ಎಲ್.ಭೈರಪ್ಪ, ಎಚ್.ವೈ.ಶಾರದಾಪ್ರಸಾದ್, ದೇವರಾಜ ಅರಸ್, ಸಿದ್ಧರಾಮಯ್ಯ, ಕೆ.ವಿ.ಸುಬ್ಬಣ್ಣ, ರಘು ದೀಕ್ಷಿತ್ ಪಂಡಿತ್ ರಾಜೀವ ತಾರಾನಾಥ್ ಮುಂತಾದವರು ವಿಶ್ವವಿದ್ಯಾನಿಲಯದ ಶ್ರೇಷ್ಠ ಸಂಪನ್ಮೂಲವ್ಯಕ್ತಿಗಳು. ೧೦೦ವರ್ಷಗಳಿಂದ ವಿಶ್ವವಿದ್ಯಾನಿಲಯ ಮಾಡಿರುವ ಶ್ರೇಷ್ಠ ಕೆಲಸ ಇದಾಗಿದೆ. ಬರೀ ವಿವಿಯಲ್ಲ, ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ೧೧ ಅಧ್ಯಯನ ವಿಭಾಗಗಳ ಮೂಲಕ ೧೯೧೬ ರಲ್ಲಿ ಆರಂಭವಾದ ಮೈಸೂರು ವಿಶ್ವವಿದ್ಯಾನಿಲಯ ಕಳೆದ ಒಂಭತ್ತುವರೆ ದಶಕದಲ್ಲಿ ಕ್ರಮಿಸಿರುವ ಹಾದಿ ಅನನ್ಯ. ಪ್ರಸ್ತುತ ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ೫೪ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ೨೦೨ ಸಂಯೋಜಿತ ಕಾಲೇಜುಗಳು, ೪೯ ಸಂಶೋಧನ ಸಂಸ್ಥೆಗಳು, ೩೮ ಹೊರ ರೀಚ್ ಕೇಂದ್ರಗಳು, ೫೫೦೦ ಸಾವಿರಕ್ಕೂ ಹೆಚ್ಚು ಸ್ನಾತಕೋತ್ತರ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ಒಳಗೊಂಡು, ಇಡೀ ದಕ್ಷಿಣ ಭಾರತಕ್ಕೆ ಹೆಮ್ಮೆಯ ವಿಶ್ವವಿದ್ಯಾ ನಿಲಯವಾಗಿದೆ. ಇಲ್ಲಿ ೩೬ಕ್ಕೂ ಹೆಚ್ಚು ದೇಶದ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಅಂತರಾಷ್ಟ್ರೀಯ ಕೇಂದ್ರ, ಎಜುಕೇಶನಲ್ ಮಲ್ಟಿಮೀಡಿಯಾ ರೀಸರ್ಚ ಸೆಂಟರ್, ಸೆಂಟರ್ ಫಾರ್ ಇನ್ಫರ್ಮೇಷನ್ ಅಂಡ್ ಟೆಕ್ನಾಲಜಿ(ಸಿಸ್ಟ್), ಯೂನಿವರ್ಸಿಟಿ ಆಫ್ ಸ್ಕೂಲ್ ಡಿಸೈನ್, ಗಾಂಧಿಭವನ, ಅಂಬೇಡ್ಕರ್ ಅಧ್ಯಯನ ಕೇಂದ್ರ, ಸೆಂಟರ್ ಫಾರ್ ಪ್ರೊಫಿಶಿಯನ್ಸಿ ಡೆವಲಪ್ಮೆಂಟ್ ಅಂಡ್ ಪ್ಲೇಸ್ಮೆಂಟ್ ಸರ್ವೀಸಸ್, ಹೊರದೇಶಗಳ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಹಾಸ್ಟೆಲ್ ಸೌಲಭ್ಯ, ಭವ್ಯವಾದ ಗ್ರಂಥಾಲಯವನ್ನು ಹೊಂದಿದೆ. ಆಧುನಿಕ ಕಾಲದ ಮೌಲ್ಯಮಾಪನ ವಿಧಿ-ವಿಧಾನ ವ್ಯವಸ್ಥೆಗೆ ತಕ್ಕಂತೆ ರೂಪುಗೊಳ್ಳುತ್ತಿರುವ ವಿಶ್ವವಿದ್ಯಾನಿಲಯ ಇದುವರೆವಿಗೂ ನ್ಯಾಕ್ ನಿಂದ ಮೂರು ಬಾರಿ ಮೌಲ್ಯಾಂಕನಕ್ಕೆ ಒಳಗಾಗಿ, ಅಷ್ಟೂ ಬಾರಿಯೂ ನ್ಯಾಕ್ ಮಾನ್ಯತೆ ಪಡೆದಿದೆ. ಪ್ರಸ್ತುತ ನ್ಯಾಕ್ ನಿಗದಿಪಡಿಸಿದ್ಧ ೪ ಅಂಕಗಳ ಸ್ಕೇಲ್ ನಲ್ಲಿ, ೩.೪೭ ಕ್ರಮಾಂಕದಲ್ಲಿ ಗುರುತಿಸಿಕೊಂಡಿರುವ ವಿವಿ 'ಎ' ಗ್ರೇಡ್ ಮಾನ್ಯತೆ ಪಡೆದಿದೆ. ೧೯೮೬ ರಿಂದ ಇಲ್ಲಿಯವರೆವಿಗೂ ೩೬೦೦ಕ್ಕೂ ಹೆಚ್ಚು ಸಂಶೋಧನ ಪ್ರಬಂಧಗಳನ್ನು ಪ್ರಕಟಿಸಿದೆ. ಇದೆಲ್ಲದರೆ ಪರಿಣಾಮ ಕೇಂದ್ರ ಸರ್ಕಾರ ಮೈಸೂರು ವಿಶ್ವವಿದ್ಯಾನಿಲಯವನ್ನು ೨೦೧೧-೧೨ನೇ ಸಾಲಿನಲ್ಲಿ "ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್" ಎಂಬ ಕೀರ್ತಿ ನೀಡಿ ೧೦೦ ಕೋಟಿ ರೂ.ಅನುದಾನ ನೀಡಿದೆ. ವಿಶ್ವವಿದ್ಯಾ ನಿಲಯದಲ್ಲಿ ನಡೆಯುವ ಸಂಶೋಧನೆಗಳಿಗೆ ಮನಸೋತ ಯುಜಿಸಿ ಕೂಡ 'ಯೂನಿವರ್ಸಿಟಿ ವಿತ್ ಪೊಟೆಂಷಿಯಲ್ ಫಾರ್ ಎಕ್ಸಲೆನ್ಸ್ ಎಂದು ಬೆನ್ನು ತಟ್ಟಿ ೫೦ ಕೋಟಿ ನೀಡಿದೆ. ವಿಶ್ವವಿದ್ಯಾನಿಲಯ ಸಂಜೆ ಕಾಲೇಜು ಮೈಸೂರು ವಿಶ್ವವಿದ್ಯಾನಿಲಯದ ಹೆಮ್ಮೆಯ ಅಂಗ ಸಂಸ್ಥೆಯಾದ ವಿಶ್ವ ವಿದ್ಯಾನಿಲಯ ಸಂಜೆ ಕಾಲೇಜು ೧೯೬೫ ರಲ್ಲಿ ಸ್ಥಾಪಿಸಲ್ಪಟ್ಟಿತು. ೨೦೧೫ ರಲ್ಲಿ ಸುವರ್ಣ ಮೊಹೋತ್ಸವವನ್ನು ಆಚರಿಸಿರುವ ಈ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನದಾನ ಮಾಡಿದ, ಮಾಡುತ್ತಿರುವ ಮೈಸೂರಿನ ಹೆಮ್ಮೆಯ ವಿದ್ಯಾಸಂಸ್ಥೆ. ಇಲ್ಲಿ ತರಗತಿಗಳು ಸಂಜೆ ವೇಳೆ ನಡೆಯುವುದರಿಂದ ಬಹುತೇಕ ಉದ್ಯೋಗಸ್ಥರ ಅಕ್ಷರ ದಾಹವನ್ನು ನೀಗುತ್ತಿರುವ ಸಂಜೆ ಮಲ್ಲಿಗೆ ಇದು. ಪ್ರಸ್ತುತ ಬಿ.ಎ. ಬಿ.ಕಾಂ ಮತ್ತು ಬಿ.ಬಿ.ಎಂ ಪದವಿಗಳಿಗೆ ಇಲ್ಲಿ ಪ್ರವೇಶಾತಿ ಉಂಟು. ೨೦೧೩-೧೪ನೇ ಸಾಲಿನಲ್ಲಿ ಮೈಸೂರು ವಿ.ವಿ.ಯ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಸಂಜೆ ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ಆರಂಬಿಸಿದೆ. ಈ ಸಾಲಿನಿಂದ ಎಂ.ಎ. ಇತಿಹಾಸದಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪ್ಸಿಸಲಾಗಿದೆ. ಪ್ರಸ್ತುತ ೧೮ ಅಧ್ಯಾಪಕರು ಮತ್ತು ಸುಮಾರು ೩೦ ಮಂದಿ ಅತಿಥಿ ಉಪನ್ಯಾಸಕರು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಸುಮಾರು ೮೦೦ ವಿದ್ಯಾರ್ಥಿಗಳಿದ್ದಾರೆ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ[ಎನ್.ಎಸ್.ಎಸ್] ಮತ್ತು ರಾಷ್ಟ್ರೀಯ ಸೇವಾದಳ[ಎನ್.ಸಿ.ಸಿ] ಘಟಕಗಳು ಸಕ್ರಿಯವಾಗಿವೆ. ಕಾಲೇಜಿನಿಂದ "ಸಂಜೆ ಮಲ್ಲಿಗೆ" ಎಂಬ ವಾರ್ಷಿಕ ಸಂಚಿಕೆ ಹೊರಬರುತ್ತಿದೆ. ಈ ಬಾರಿ ಎಂ ಎ.ಇತಿಹಾಸ ಸ್ನಾತಕೋತ್ತರ ಪದವಿಯನ್ನು ಆರಂಭಿಸಲಾಗಿದ್ದು 'ಎ'ಯೋಜನೆ[ಸ್ಕೀಮ್] ಅಡಿಯಲ್ಲಿ ೧೪ ಸೀಟುಗಳು ಮತ್ತು 'ಬಿ'ಯೋಜನೆ[ಸ್ಕೀಮ್] ಅಡಿಯಲ್ಲಿ ೭ ಸೀಟುಗಳು ಲಭ್ಯವಿವೆ. ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳ ಪಟ್ಟಿ ಕ್ರಿ.ಶ.೧೯೧೬ರಲ್ಲಿ ಪ್ರಾರಂಭಗೊಂಡ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳ ಪಟ್ಟಿ. ಲಾಂಛನದ ವೈಶಿಷ್ಟ್ಯತೆ ಮೈಸೂರು ವಿಶ್ವವಿದ್ಯಾಲಯದ ಲಾಂಛನವು ವಿಶೇಷತೆಯಿಂದ ಕೂಡಿರುವಂತಹುದು. ಅದರ ಎರಡು ಪಾರ್ಶ್ವಗಳಲ್ಲೂ ಶರಭಪ್ರಾಣಿಯನ್ನು ಹೊಂದಿ, ನಡುವೆ ಎರಡು ಶಿರಗಳುಳ್ಳ 'ಗಂಡುಭೇರುಂಡ, ಪಕ್ಷಿಯಿಂದ ಕೂಡಿದೆ. ಆ ಶರಭಪ್ರಾಣಿಗೆ ಆನೆಯ ತರಹದ ಸೊಂಡಿಲಿದೆ. ಇವೆರಡು ಪೌರಾಣಿಕ/ಕಾಲ್ಪನಿಕ ಪ್ರಾಣಿ-ಪಕ್ಷಿಗಳಾಗಿವೆ. ಈ ಸಂಕೇತಗಳು ವಿದ್ಯಾವಂತರಲ್ಲಿರಬೇಕಾದ ಜಾಗೃತಿ, ಶೀಲ, ಏಕತೆ, ಧೈರ್ಯ, ಔದಾರ್ಯ ಸಮರಸ ಬಾಳ್ವೆ ಮತ್ತು ಸತ್ಯವನ್ನು ಪ್ರತಿನಿಧಿಸುತ್ತವೆ. ಈ ಲಾಂಛನದ ಮೇಲೆ "ನ ಹಿ ಜ್ಞಾನೇನ ಸದೃಶಂ" ಎಂಬ ಧ್ಯೇಯವಾಕ್ಯವಿದೆ. ಅಂದರೆ "ಜ್ಞಾನಕ್ಕೆ ಸಮನಾದುದು ಬೇರೊಂದಿಲ್ಲ" ಎಂಬರ್ಥವಿದೆ. ಅಲ್ಲದೆ ಈ ಲಾಂಛನದಲ್ಲಿ ಮತ್ತೊಂದು ಸಂಸ್ಕೃತ ನುಡಿಯಾದ 'ಸತ್ಯಮೇವೂದ್ಧರಾಮ್ಯಹಂ'ನ್ನು ರೇಖಿಸಲ್ಪಟ್ಟಿದೆ. ಅಂದರೆ ನಾನು ಯಾವಾಗಲೂ ಸತ್ಯವನ್ನೇ ಎತ್ತಿ ಹಿಡಿಯುತ್ತೇನೆ, ಸತ್ಯವಂತರಿಂದಾಗಿ ಈ ಭೂಮಿ ಉಳಿದಿದೆ ಎಂಬ ಆದರ್ಶ ಪರಿಕಲ್ಪನೆ ಇಲ್ಲಿದೆ. ಕ್ಯಾಂಪಸ್ ಸೌಂದರ್ಯ ಭಾರತದ ವಿದ್ಯಾಕ್ಷೇತ್ರದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಹೇಗೆ ತನ್ನದೇ ಆದ ಛಾಪು ಮೂಸಿಡಿದೆಯೋ ಅದೇ ರೀತಿ ವಿ.ವಿ.ಯ ಕ್ಯಾಂಪಸ್ ಸೌಂದರ್ಯವು ತನ್ನದೇ ಆದ ವೈಶಿಷ್ಟ್ಯಗಳಿಂದ ಕೂಡಿದೆ. ಸುಮಾರು ೬೫೦ ಎಕರೆಗಿಂತಲೂ ಹೆಚ್ಚು ವಿಸ್ತೀರ್ಣದಲ್ಲಿ ಹಸಿರು ಮತ್ತು ನೀರಿನ ಸಮ್ಮಿಲನದಿಂದ ಹೆಣೆದುಕೊಂಡಿರುವ ಈ ವಿದ್ಯಾಕ್ಷೇತ್ರ ನೋಡುಗರ ಮನವನ್ನು ಸೆಳೆಯುತ್ತಿದೆ. ಈ ಕ್ಯಾಂಪಸ್‍ನ ಮುಖ್ಯ ಆಕರ್ಷಣೆ, ಗ್ರಂಥಾಲಯ, ಬಯಲು ರಂಗಮಂದಿರ, ವೃತ್ತಾಕಾರದ ಕ್ಯಾಂಟೀನ್ ಮತ್ತು ಪ್ರಸಿದ್ಧವಾದ ಕುಕ್ಕರಹಳ್ಳಿ ಕೆರೆ ಸಾಮಾಜಿಕ ಜವಾಬ್ದಾರಿ ಮೈಸೂರು ವಿಶ್ವ ವಿದ್ಯಾನಿಲಯವು ಸಾಮಾಜಿಕ ಜವಾಬ್ದಾರಿಯುತ ತಾಣವಾಗಿದೆ. ಅನೇಕ ಸುತ್ತಮುತ್ತಲಿನ ಹಳ್ಳಿಗಳಿಂದ ಬರುವ ಗ್ರಾಮೀಣ ವಿದ್ಯಾರ್ಥಿಗಳು ಇಲ್ಲಿನ ಪರಿಸರದಲ್ಲಿನ ಬದಲಾವಣೆಯನ್ನು ಗಮನಿಸಿ, ಅವರಿಗೂ ಸಹ ತಮ್ಮ ಮೇಲಿನ ಜವಾಬ್ದಾರಿ ತಿಳಿಯಲು ಅನುಕೂಲಕರವಾದ ವಾತಾವರಣ ಸೃ‌‌ಷ್ಟಿಸುತ್ತದೆ. ಮೈಸೂರು ವಿಶ್ವವಿದ್ಯಾನಿಲಯ ತನ್ನ ಶತಮಾನೋತ್ಸವದ ಸಂಭ್ರಮದಲ್ಲಿ ಉಲ್ಲೇಖಗಳು ಹೊರಗಿನ ಸಂಪರ್ಕಗಳು ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ತಾಣ ಬಾಹ್ಯಕೊಂಡಿಗಳು ಶಿಕ್ಷಣ ವಿಶ್ವವಿದ್ಯಾಲಯಗಳು ಮೈಸೂರು ಶೈಕ್ಷಣಿಕ ಸಂಸ್ಥೆಗಳುಕರ್ನಾಟಕ ವಿಶ್ವವಿದ್ಯಾಲಯಗಳು‏‎
982
https://kn.wikipedia.org/wiki/%E0%B2%AE%E0%B2%A7%E0%B3%8D%E0%B2%B5%E0%B2%BE%E0%B2%9A%E0%B2%BE%E0%B2%B0%E0%B3%8D%E0%B2%AF
ಮಧ್ವಾಚಾರ್ಯ
ಶ್ರೀ ಮಧ್ವಾಚಾರ್ಯರು (೧೨೩೮-೧೩೧೭) ದ್ವೈತಮತದ ಸ್ಥಾಪಕರು ಮತ್ತು ತತ್ವಜ್ಞಾನಿಗಳು. ಮಧ್ವಾಚಾರ್ಯರ ಜೀವನ ಶ್ರೀ ಮಧ್ವಾಚಾರ್ಯರು ಉಡುಪಿಯ ಹತ್ತಿರದಲ್ಲಿರುವ ಪಾಜಕ ಗ್ರಾಮದಲ್ಲಿ ತಂದೆ ಮಧ್ಯಗೇಹ ಭಟ್ಟ ಮತ್ತು ತಾಯಿ ವೇದವತಿಗೆ ಜನಿಸಿದರು. ತಂದೆ ತಾಯಿ ವಾಸುದೇವನೆಂದು ಹೆಸರಿಟ್ಟಿದ್ದರು. ಬಾಲ್ಯದಲ್ಲೆ ಅಸಾಧಾರಣ ಪ್ರತಿಭೆ ತೋರಿದ ವಾಸುದೇವ, ತನ್ನ ಹನ್ನೆರಡೆನೆಯ ವಯಸ್ಸಿನಲ್ಲಿ ವಿಧ್ಯಾಭ್ಯಾಸ ಮತ್ತು ವೇದಾಭ್ಯಾಸಗಳೆರಡನ್ನು ಮುಗಿಸಿ ಗುರು ಅಚ್ಯುತ ಪ್ರಜ್ಞ ಸನ್ಯಾಸವನ್ನು ಪಡೆದು ಪೂರ್ಣಪ್ರಜ್ಞರೆಂಬ ಹೆಸರು ಪಡೆದರು. ಅವರ ಅನುಯಾಯಿ ಭಕ್ತರು, ಸರ್ವೊತ್ತಮನಾದ ಶ್ರೀಪತಿಯಾದ ಪರಮಾತ್ಮನ ಅದೇಶವನ್ನು ಪಾಲಿಸಲು ಜೀವೋತ್ತಮನಾದ ಪವಮಾನನು ಶ್ರೀಮದಾನಂದತೀರ್ಥರಾಗಿ ಜನಿಸಿದರು ಎಂದು ಭಾವಿಸುತ್ತಾರೆ. ಶ್ರೀಮದಾಚಾರ್ಯರಿಗೆ ಗುರುಗಳು ವೈದಿಕ ಕ್ರಮದಲ್ಲಿ ಪಟ್ಟಾಭಿಶೇಕ ನೆರವೆರಿಸಿ ಇಟ್ಟ ನಾಮ 'ಆನಂದತೀರ್ಥ'. ವೇದಾಂತ ದರ್ಶನದಲ್ಲಿ, ಮಧ್ವಚಾರ್ಯರು ದ್ವೈತ ಸಿದ್ಧಾಂತದ ಉಗ್ರ ಪ್ರತಿಪಾದಕರು. ಅವರು ಹದಿಮೂರು ಹದಿನಾಲ್ಕನೇ [೧೨೩೮-೧೩೧೭] ಶತಮಾನದಲ್ಲಿ ಇದ್ದವರು. ಅವರು ಭಕ್ತಿ ಮಾರ್ಗದ ಪ್ರವರ್ತಕರಲ್ಲಿ ಪ್ರಮುಖರು. ಅವರು ವಾಯುವಿನ ಅವತಾರದಲ್ಲಿ ಮೂರನೆಯವರಾದ ಮಾರುತಿ ಭೀಮರ ನಂತರ ಬಂದ ಅವತಾರವೆಂದು ಹೇಳುತ್ತಾರೆ(ಮಹಾಭಾರತ ತಾತ್ಪರ್ಯನಿರ್ಣಯದಲ್ಲಿ ಅವರೇ ಹೇಳಿಕೊಂಡಿದ್ದಾರೆ). ಮಧ್ವರು ಉಡುಪಿಯ ಹತ್ತಿರ ಪಾಜಕದಲ್ಲಿ ವಿಜಯ ದಶಮಿಯಂದು ಕ್ರಿ.ಶ.೧೨೩೮ ರಲ್ಲಿ ಒಂದು ಚಿಕ್ಕ ಕುಟೀರದಲ್ಲಿ ಜನಿಸಿದರು. ಅವರ ತಂದೆ ನಡ್ಡಿಲ್ಲಾಯ ನಾರಾಯಣ ಭಟ್ಟ.(ಇಂಗ್ಲಿಷ್ ವಿಕಿಪೀಡಿಯಾ), ತಾಯಿ ವೇದಾವತಿ. ಅವರು ಆ ಮಗುವಿಗೆ ವಾಸುದೇವನೆಂದು ನಾಮಕರಣ ಮಾಡಿದರು. ನಂತರ ಮಧ್ವರು ಪೂರ್ಣಪ್ರಜ್ಞ, ಪೂರ್ಣ ಬೋಧ, ಆನಂದ ತೀರ್ಥ, ಅನುಮಾನ ತೀರ್ಥ,ಮಧ್ವಾಚಾರ್ಯ ಎಂಬ ಹೆಸರುಗಳಿಂದ ಪ್ರಸಿದ್ಧರಾದರು. ಅವರ ಜನನಕ್ಕೆ ಮುಂಚೆ ಅವರ ತಾಯಿ ತಂದೆ ಉಡುಪಿ ಪೇಟೆಗೆ ಹೋಗಿದ್ದಾಗ ಒಬ್ಬ ಭಿಕ್ಷುಕ ಶ್ರೀ ಅನಂತೇಶ್ವರ ದೇವಸ್ಥಾನದ ಸ್ಥಂಬ ವನ್ನು ಏರಿ, 'ಈ ಊರಿನಲ್ಲಿ ವಾಯು ದೇವನು ಅವತರಿಸುವನು' ಎಂದು ಕೂಗಿ ಹೇಳಿದನೆಂದು ಪ್ರತೀತಿ. ವಾಸುದೇವನು ಚಿಕ್ಕ ಬಾಲಕನಾಗಿದ್ದಾಗಲೇ ಅಸಾಧಾರಣ ಪ್ರತಿಭೆಯನ್ನು ತೋರಿದನು. ಅವನು ಹನ್ನೊಂದನೇ ವರ್ಷದಲ್ಲಿ ಉಡುಪಿಯಲ್ಲಿದ್ದ ಅಚ್ಯುತ ಪ್ರೇಕ್ಷರಿಂದ ಸಂನ್ಯಾಸ ದೀಕ್ಷೆಯನ್ನು ಸ್ವೀಕರಿಸಿದನು. ಅವರು ಅವನಿಗೆ ಸಂನ್ಯಾಸ ದೀಕ್ಷೆ ಕೊಡುವಾಗ ಪೂರ್ಣಪ್ರಜ್ಞರೆಂದು ನಾಮಕರಣ ಮಾಡಿದರು. ಅವರು ಸಂನ್ಯಾಸ ದೀಕ್ಷೆಯನ್ನು ತೆಗೆದುಕೊಂಡ ಒಂದು ತಿಂಗಳ ನಂತರ ಪಂಡಿತೋತ್ತಮರನ್ನು ವೇದಾಂತ ತರ್ಕದಲ್ಲಿ ಸೋಲಿಸಿದರು. ಅದನ್ನು ನೋಡಿ ಅಚ್ಯುತಪ್ರೇಕ್ಷರು ಅವರಿಗೆ ವೇದಾಂತ ಸಾಮ್ರಾಜ್ಯದ ಚಕ್ರವರ್ತಿಯೆಂದು ಹೇಳಿ ಆನಂದತೀರ್ಥ ರೆಂಬ ಬಿರುದನ್ನು ಕೊಟ್ಟರು. ನಂತರ ಅವರು ವೇದದ ಬಲಿಷ್ಟ ಸೂಕ್ತದಲ್ಲಿ ಇರುವ ಮಧ್ವ ಹೆಸರನ್ನು ಆಯ್ದುಕೊಂಡು ಆ ಹೆಸರಿನಲ್ಲಿ ಗ್ರಂಥ ರಚಿಸಿ, ಮಧ್ವಾಚಾರ್ಯರೆಂದು ಪ್ರಸಿದ್ಧರಾದರು. ಅವರು ಪ್ರಚುರಪಡಿಸಿದ ದ್ವೈತ ಸಿದ್ಧಾಂತ ತತ್ವವಾದ ಅಥವಾ ದ್ವೈತ ಮತವೆಂದು ಪ್ರಸಿದ್ಧವಾಗಿದೆ. ದಕ್ಷಿಣ ಭಾರತ ಪ್ರವಾಸ ಅವರು ದಕ್ಷಿಣ ಭಾರತ ಪ್ರವಾಸ ಕೈಕೊಂಡು ಅನಂತಶಯನ, ಶ್ರೀರಂಗಂ ಮೊದಲಾದ ಕಡೆ ತಮ್ಮ ತತ್ವವಾದ ವನ್ನು ಪ್ರಚಾರ ಮಾಡಿದರು. ಸಂಪ್ರದಾಯವಾದಿಗಳಿಂದ ಇದಕ್ಕೆ ಪ್ರಬಲ ವಿರೋಧ ಕಂಡುಬಂದಿತು. ಮಧ್ವರು ಅದಕ್ಕೆ ಜಗ್ಗದೆ ತಮ್ಮ ವಾದವನ್ನು ಸಮರ್ಥಿಸಿ ಕೊಂಡರು. ನಂತರ ಉಡುಪಿಗೆ ಹಿಂತಿರುಗಿದರು. ಅಲ್ಲಿ ಅವರು ಗೀತೆಗೆ ಭಾಷ್ಯವನ್ನು ಬರೆದರು. ತತ್ವವಾದ ಸಿದ್ಧಾಂತದ ಆಧಾರದಮೇಲೆ ೩೭ ಗ್ರಂಥಗಳನ್ನು ಬರೆದರು. ಅವನ್ನು ಸರ್ವ ಮೂಲಗ್ರಂಥ ಗಳೆಂದು ಕರೆಯುತ್ತಾರೆ. ಈ ಗ್ರಂಥಗಳ ಬಗೆಗೆ ಮತ್ತು ತತ್ವವಾದದ ಬಗೆಗೆ ಭಾರತಾದ್ಯಂತ ತೀವ್ರ ಚರ್ಚೆ ನೆಡೆಯಿತು. ಮಧ್ವರು ತಮ್ಮ ವಾದಕ್ಕೆ ಮೂರು ಬಗೆಯ ಪ್ರಮಾಣಗಳನ್ನು ಆಧಾರವಾಗಿ ತೆಗೆದುಕೊಂಡಿದ್ದಾರೆ. ಅವು ಪ್ರತ್ಯಕ್ಷ, ಅನುಮಾನ [ತಾರ್ಕಿಕ], ಮತ್ತು ಆಗಮ. ಉತ್ತರ ಭಾರತದ ಯಾತ್ರೆ ಅವರು ಕೆಲವು ಕಾಲದ ನಂತರ ತಮ್ಮ ತತ್ವವಾದ ಪ್ರಚಾರಕ್ಕಾಗಿ ಉತ್ತರ ಭಾರತದ ಯಾತ್ರೆ ಕೈಗೊಂಡರು. ಅವರು ಬದರಿಕಾಶ್ರಮಕ್ಕೆ ಹೋಗಿ ಅಲ್ಲಿ ವೇದ ವ್ಯಾಸರ ಆಶ್ರಮದಲ್ಲಿ ವ್ಯಾಸಮಹರ್ಷಿಗಳನ್ನು ಕಂಡು ಅವರಿಗೆ ತಮ್ಮ ಗೀತೆಯ ಭಾಷ್ಯವನ್ನು ತೋರಿಸಿ ಅವರ ಮೆಚ್ಚುಗೆಯನ್ನು ಪಡೆದುದಾಗಿ ಹೇಳುತ್ತಾರೆ. ಅವರು ಗೀತಾ ಪೀಠಿಕೆಯಲ್ಲಿ ಒಂದುವಾಕ್ಯವನ್ನು ಮಾತ್ರಾ ಬದಲಾಯಿಸಿದುದಾಗಿ ಹೇಳುತ್ತಾರೆ. ನಾನು ಅವನ (ದೇವನ) ಪೂರ್ಣ ಸಾಮರ್ಥ್ಯ ಉಪಯೋಗಿಸಿ ಬರೆದಿದ್ದೇನೆ ಎಂಬುದನ್ನು, ನಾನು ಅವನ ಅಲ್ಪವೇ ಸಾಮರ್ಥ್ಯವನ್ನು ಉಪಯೋಗಿಸಿ ಬರೆದಿದ್ದೇನೆ ಎಂದು ಬದಲಾಯಿಸಿರುವುದಾಗಿ ಹೇಳಿದ್ದಾರೆ. ಅವರು ಬದರಿಯಿಂದ ಹಿಂತಿರುಗಿದ ಮೇಲೆ ಬ್ರಹ್ಮ ಸೂತ್ರ ಭಾಷ್ಯವನ್ನು ಬರೆದರು. ಅವರು ಆನಂತರ ಅನೇಕ ಗ್ರಂಥಗಳನ್ನು ರಚಿಸಿದರೂ, ಅದನ್ನು ಓಲೆಗರಿಯ ಗ್ರಂಥದಲ್ಲಿ ಲಿಪಿಕಾರರಾಗಿ ಬರೆದವರು ಅವರ ಶಿಷ್ಯರಾದ ಸತ್ಯ ತೀರ್ಥರು. ಆನಂತರ ಅವರ ಕೀರ್ತಿ ದೇಶಾದ್ಯಂತ ಹರಡಿ ಅನೇಕರು ಅವರ ಶಿಷ್ಯರಾದರು. ಅನೇಕರು ಅವರಿಂದ ಸಂನ್ಯಾಸ ಸ್ವೀಕಾರ ಮಾಡಿದರು. ಅವರ ಶಿಷ್ಯ ಅಚ್ಯುತ ಪ್ರೇಕ್ಷ್ಯರಿಗೆ ಅವರ ವಾದದ ಬಗೆಗೆ ಇದ್ದ ಅಲ್ಪ ಸ್ವಲ್ಪ ಸಂಶಯವೂ ಹೋಗಿ ಪೂರ್ಣ ಮನಸ್ಸಿನ ಶಿಷ್ಯರಾದರು. ಉಡುಪಿಯಲ್ಲಿ ಬದರಿಯಿಂದ ಬಂದ ಅವರು ಉಡುಪಿಯಲ್ಲಿ ನೆಲೆಸಿ ದಶ ಉಪನಿಷತ್ತುಗಳಿಗೆ ಭಾಷ್ಯವನ್ನು ಬರೆದರು. ಋಗ್ವೇದದ ೪೦ ಸೂಕ್ತಗಳಿಗೆ ಟೀಕೆಯನ್ನು ಬರೆದರು. ಭಾಗವತ (ಮಹಾಭಾರತ ?) ತಾತ್ಪರ್ಯ ನಿರ್ಣಯವನ್ನು ಬರೆದರು. ಪಶ್ಚಿಮ ಸಮುದ್ರ ತೀರದಲ್ಲಿ ಸಿಕ್ಕಿದ ಶ್ರೀ ಕೃಷ್ಣನ ಮೂರ್ತಿಯನ್ನು ಇದೇ ಸಮಯದಲ್ಲಿ ಪ್ರತಿಷ್ಟಾಪಿಸಿದರು. ಫುನಃ ಎರಡನೇ ಬಾರಿ ಬದರಿಗೆ ಪ್ರಯಾಣ ಮಾಡಿದರು. ಬದರಿಯ ಎರಡನೇ ಯಾತ್ರೆ ಬದರಿಯ ಎರಡನೇ ಯಾತ್ರೆಯಲ್ಲಿ ಅವರು ಗಂಗಾನದಿಯನ್ನು ದಾಟಿ ಮುಸ್ಲಿಮರ ದೊರೆ ಇದ್ದ ರಾಜ್ಯದ ಮೂಲಕ ಹೋಗಬೇಕಿತ್ತು. ಹಾಗೆ ಗಂಗೆಯನ್ನು ದಾಟಿದಾಗ ರಾಜ ಭಟರು ಅವರನ್ನು ಮುಸ್ಲಿಮರ ದೊರೆಯ ಎದುರಿಗೆ ಎಳದೊಯಿದರು. ಆದರೂ ಇವರು ಸ್ವಲ್ಪವೂ ಭಯ ಪಡಲಿಲ್ಲ. ಆಗ ಆ ದೊರೆಯು ಇವರ ಧೈರ್ಯವನ್ನು ಕಂಡು ಬೆರಗಾದಾಗ , ಇವರು ವಿಶ್ವವನ್ನು ಬೆಳಗುವ ಆ ದೇವನಾದ ತಂದೆಯನ್ನು ನೀನೂ ಪೂಜಿಸುತ್ತೀಯೆ ಹಾಗೇ ನಾನೂ ಪೂಜಿಸುತ್ತೇನೆ, ನನಗೆ ಭಯವೇಕೆ ಎಂದರು, ಅವನು ಇವರ ಮಾತಿಗೆ ಮೆಚ್ಚಿ ಅನೇಕ ಕೊಡುಗೆಗಳನ್ನು ನೀಡಿದನು. ಆದರೆ ಅವರು ಅದನ್ನೆಲ್ಲಾ ನಿರಾಕರಿಸಿ ಬದರಿಗೆ ಪ್ರಯಾಣ ಬೆಳಸಿದರು. ಅಲ್ಲಿ ಅವರು ಪುನಃ ವ್ಯಾಸರನ್ನೂ ನಾರಾಯಣನನ್ನೂ ದರ್ಶನ ಮಾಡಿ ಹಿಂತಿರುಗಿದರು. ಧರಿಯಲ್ಲಿ ಕಾಶಿಗೆ ಹೋಗಿ ಅಲ್ಲಿ ಅಮರೇಂದ್ರ ಪುರಿ ಎಂಬ ಅದ್ವೈತಿಯನ್ನು ವಾದದಲ್ಲಿ ಸೋಲಿಸಿದರು. ಅಲ್ಲಿಂದ ಕುರುಕ್ಷೇತ್ರಕ್ಕೆ ಬಂದರು. ಅಲ್ಲಿ ನಡೆದ ಒಂದು ಕಥೆ ಇದೆ. ಅವರು ಒಂದು ಸ್ಥಳದಲ್ಲಿ ತಮ್ಮ ಶಿಷ್ಯರಿಗೆ ಅಗೆಯಲು ಹೇಳಿದರು. ಅವರು ಅಲ್ಲಿ ಅಗೆದಾಗ ಅವರಿಗೆ ಅಲ್ಲಿ ಒಂದು ದೊಡ್ಡ ಗದೆ ಕಂಡಿತು. ಅದು ದ್ವಾಪರದಲ್ಲಿ ಭೀಮನು ಉಪಯೋಗಿಸಿದ ಗದೆಯೆಂದು ತಿಳಿಸಿ ಅದನ್ನು ಪುನಃ ಹಾಗೆಯೇ ಮಣ್ಣಿನಲ್ಲಿ ಮುಚ್ಚಿಸಿದರು. ನಂತರ ಗೋವಾಕ್ಕೆ ಬಂದು ಉಡುಪಿಗೆ ಹಿಂತಿರುಗಿದರು. ಆಗ ಅವರು ತಮ್ಮ ವಿದ್ವತ್ಪೂರ್ಣ ಸಂಗೀತದಿಂದ ಜನರನ್ನು ರಂಜಿಸಿದುದಾಗಿ ಹೇಳುತ್ತಾರೆ. ದಕ್ಷಿಣ ಯಾತ್ರೆ ಅವರು ನಂತರ ದಕ್ಷಿಣ ಯಾತ್ರೆಯನ್ನು ಮಾಡಿ ಕಾಸರಗೊಡಿನ ಪದ್ಮ ತೀರ್ಥರನ್ನೂ ಪುಂಡರೀಕ ಪುರಿಗಳನ್ನೂ ವಾದದಲ್ಲಿ ಸೋಲಿಸಿದರು. ಪದ್ಮತೀರ್ಥರು ಪೇಜತ್ತಾಯ ಶಂಕರ ಪಂಡಿತರ ಮೂಲಕ ಮಧ್ವರ ಗ್ರಂಥಗಳನ್ನು ಅಪಹರಿಸಿದ್ದರೆಂದೂ ಮಧ್ವರೊಡನೆ ವಾದವಾದ ನಂತರ ಆ ಗ್ರಂಥಗಳನ್ನು ಹಿಂತಿರುಗಿಸಿದರೆಂದೂ ಹೇಳುತ್ತಾರೆ. ಅವರಿಬ್ಬರ ವಾದ ಸಾರಾಂಶವನ್ನು ವಾದ ಅಥವಾ ತತ್ವೋದ್ಯೋತ ಗ್ರಂಥವಾಗಿ ರಚಿಸಿರುವುದಾಗಿ ಹೇಳುತ್ತಾರೆ. ಅವರು ಆನಂತರ ಆಸ್ಥಾನ ಪಂಡಿತರಾದ ತ್ರಿವಿಕ್ರಮ ಪಂಡಿತರನ್ನು ೧೫ ದಿನಗಳಕಾಲ ವಾದ ಮಾಡಿ ಸೋಲಿಸಿದರೆಂದು ಹೇಳುತ್ತಾರೆ. ಅವರು ನಂತರ ಮಧ್ವರ ಬ್ರಹ್ಮ ಸೂತ್ರಕ್ಕೆ ಟೀಕೆಯನ್ನು ಬರೆದರು. ನಾಲ್ಕು ಭಾಗಗಳಲ್ಲಿರುವ ಇದನ್ನು ನಾಲ್ಕು ಶಿಷ್ಯರಿಗೆ ಏಕ ಕಾಲದಲ್ಲಿ ಬಿಡುವಿಲ್ಲದೆ ಹೇಳಿ ಬರೆಸಿದರೆಂದು ಹೇಳುತ್ತಾರೆ. ಅದೇ ಸಮಯದಲ್ಲಿ ನ್ಯಾಯವಿವಾರ್ಣವ ವೆಂಬ ಗ್ರಂಥವನ್ನೂ ರಚಿಸಿದ್ದಾಗಿ ಹೇಳುತ್ತಾರೆ. ಸುಮಾರು ೭೦ ವರ್ಷ ವಯಸ್ಸಾದ ಮಧ್ವರು ತಮ್ಮ ಸೋದರನಿಗೆ ಸನ್ಯಾಸ ದೀಕ್ಷೆ ಕೊಟ್ಟು ಅವರನ್ನು ಸೋದೆ ಮಠ ಮತ್ತು ಸುಬ್ರಹ್ಮಣ್ಯ ಮಠಕ್ಕೆ ಅಧಿಪತಿಗಳನ್ನಾಗಿಮಾಡಿದರು. ಉಡುಪಿಯ ಅಷ್ಟ ಮಠಗಳು ಇದೇ ಸಮಯದಲ್ಲಿ ಉಡುಪಿಯ ಅಷ್ಟ ಮಠಗಳಿಗೆ ತಮ್ಮ ಶಿಷ್ಯರಿಗೆ ದೀಕ್ಷೆ ಕೊಟ್ಟು ಮಠಾಧಿಪತಿಗಳಾಗಿ ನೇಮಿಸಿದರು. ೧. ಹೃಷೀಕೇಶ ತೀರ್ಥ (ಫಲಿಮಾರು ಮಠ) ೨. ನರಸಿಂಹ(ನರಹರಿ)ತೀರ್ಥ (ಆದಮಾರು ಮಠ) ೩. ಜನಾರ್ಧನ ತೀರ್ಥ (ಕೃಷ್ಣಾಪುರ ಮಠ) ೪. ಉಪೇಂದ್ರ ತೀರ್ಥ (ಪುತ್ತಿಗೆ ಮಠ) ೫. ವಾಮನ ತೀರ್ಥ (ಶಿರೂರು ಮಠ) ೬. ವಿಷ್ಣು ತೀರ್ಥ (ಸೋದೆ ಮಠ, ಸುಬ್ರಹ್ಮಣ್ಯ ಮಠ) ೭. ಶ್ರೀರಾಮ ತೀರ್ಥ (ಕಾಣಿಯೂರು ಮಠ) ೮. ಅಧೋಕ್ಷಜ(ಅಕ್ಷೋಭ್ಯ) ತೀರ್ಥ (ಪೇಜಾವರಮಠ) ಮಧ್ವರ ಪ್ರಸಿದ್ಧ ಶಿಷ್ಯರು - ೯. ಪದ್ಮನಾಭ ತೀರ್ಥ; ೧೦. ಮಾಧವ ತೀರ್ಥ; ನಂತರ ಉಡುಪಿಯ ಸುತ್ತ ಮುತ್ತ ಸಂಚರಿಸಿ ಉಜಿರೆಯ ಬ್ರಾಹ್ಮಣರೊಡನೆ ಚರ್ಚಿಸಿ ಪೂಜಾವಿಧಿಗೆ ಸಂಬಂಧಪಟ್ಟಂತೆ ಕರ್ಮನಿಯಮ ರಚಿಸಿದರು ಇದು ಖಂಡಾರ್ಥ ನಿರ್ಣಯವೆಂದು ಹೆಸರು ಪಡೆದಿದೆ. ನಂತರ ಪರಂತಿಯಲ್ಲಿರುವ ಪಂಚಲಿಂಗೇಶ್ವರ ದೇವಾಲಯವನ್ನು ಜೀರ್ಣೋದ್ಧಾರ ಮಾಡಿದರು. ಮಧ್ವ ನವಮಿ ತಮ್ಮ ೭೯ನೇ ವಯಸ್ಸಿನಲ್ಲಿ ಕಲಿ ೪೪೧೮ [ಕ್ರಿ.ಶ.೧೩೧೭]ರಲ್ಲಿ ಒಬ್ಬರೇ ಬದರಿಕಾಶ್ರಮಕ್ಕೆ ಪ್ರಯಾಣ ಬೆಳಸಿದರು . ಈ ದಿನವನ್ನು ಮಧ್ವ ನವಮಿ ಎಂದು ಇಂದಿಗೂ ಆಚರಿಸುತ್ತಾರೆ. ಕಾಲಕ್ರಮೇಣ ಇವರ ತತ್ವವಾದವು ಭಕ್ತಿ ಪಂಥಕ್ಕೂ, ಹರಿದಾಸ ಪಂಥಕ್ಕೂ ದಾರಿಮಾಡಿ ಕೊಟ್ಟಿತು. ಸಂಗೀತದ ಪ್ರೋತ್ಸಾಹಕ್ಕೂ, ಕನ್ನಡದಲ್ಲಿ ದಾಸ ಪಂಥದ ಮಾರ್ಗ ಬೆಳೆಯಲೂ ಇವರ ದರ್ಶನ ಸ್ಪೂರ್ತಿನೀಡಿತು. ಇವರ ಶಿಷ್ಯರಾದ ನರಹರಿ ತೀರ್ಥರು ಯಕ್ಷಗಾನ ಹಾಗೂ ಕೂಚುಪುಡಿ ನೃತ್ಯ ಪ್ರಾಕಾರಗಳ ಪುನರುತ್ಥಾನಕ್ಕೂ , ಬೆಳವಣಿಗೆಗೂ ಪ್ರೋತ್ಸಾಹಿಸಿದರು. ಪ್ರಚಾರ ಭಾರತದಲ್ಲೆಡೆ ದ್ವೈತಮತವನ್ನು ಪ್ರಚಾರಿಸಿದರು. ಎರಡು ಬಾರಿ ಬದರಿ ಯಾತ್ರೆ ಮಾಡಿ ವೇದವ್ಯಾಸ ರೂಪಿಯಾದ ಪರಮಾತ್ಮನನ್ನು ಕಂಡು,ಪರಮಾತ್ಮನಿಂದ ವೇದಗಳನ್ನು ಕಲಿತು ಉಡುಪಿಗೆ ಹಿಂದಿರುಗಿದರು. ಮಧ್ವಾಚಾರ್ಯರು ಒಂಬತ್ತು ಜನರಿಗೆ ಸನ್ಯಾಸಿ ದೀಕ್ಷೆಯನ್ನು ನೀಡಿದರು, ವೃಷ್ಣ ಮಠದಲ್ಲಿ ಶ್ರೀ ವೃಷ್ಣನ ವಿಗ್ರಹವನ್ನು ಸ್ಥಾಪಿಸಿದರು. ಶ್ರೀ ವೃಷ್ಣನು ತನ್ನ ಮಾವನ ಮನೆಯಾದ ಸಮುದ್ರ ದಿಂದ ಅಚಾರ್ಯರಿಗಾಗಿ ಗೊಪಿಯ ಉಂಡೇಯೊಳಗೆ ಕೂತು ದೊರಕಿದನು ಕೃತಿಗಳು ಶ್ರೀ ಮಧ್ವಾಚಾರ್ಯರು ಅನೇಕ ಕೃತಿಗಳನ್ನು ಸಂಸ್ಕೃತದಲ್ಲಿ ಬರೆದಿದ್ದಾರೆ. ಅವರ ಗ್ರಂಥಗಳನ್ನು ಸರ್ವಮೂಲಗ್ರಂಥಗಳು ಎಂದು ಕರೆಯಲಾಗುತ್ತದೆ. ಅವುಗಳಲ್ಲಿ ಇಂದು ಉಪಲಬ್ಧವಾದವುಗಳು ಹೀಗಿವೆ: ಗೀತಾಭಾಷ್ಯ ಗೀತಾತಾತ್ಪರ್ಯ ಬ್ರಹ್ಮಸೂತ್ರ ಭಾಷ್ಯ ಅನುವ್ಯಾಖ್ಯಾನ ನ್ಯಾಯವಿವರಣ ಅಣುಭಾಷ್ಯ ದಶೋಪನಿಷದ್ಭಾಷ್ಯಗಳು ಮಹಾಭಾರತತಾತ್ಪರ್ಯನಿರ್ಣಯ ಯಮಕಭಾರತ ದಶ ಪ್ರಕರಣಗಳು ತಂತ್ರಸಾರ ಸಂಗ್ರಹ ದ್ವಾದಶ ಸ್ತೋತ್ರ ಕೃಷ್ಣಾಮೃತಮಹಾರ್ಣವ ಸದಾಚಾರ ಸ್ಮೃತಿ ಜಯಂತೀ ನಿರ್ಣಯ ಪ್ರಣವ ಕಲ್ಪ ನ್ಯಾಸಪದ್ಧತಿ ತಿಥಿನಿರ್ಣಯ ಕಂದುಕಸ್ತುತಿ ಶಿಷ್ಯರು ಶ್ರೀ ಮಧ್ವಾಚಾರ್ಯರ ಶಿಷ್ಯವರ್ಗ ಅಪಾರವಾದುದಾಗಿತ್ತು. ಅವರಲ್ಲಿ ಪ್ರಮುಖರಾದ ಕೆಲವರನ್ನು ಹೀಗೆ ಗುರುತಿಸಬಹುದು ಶ್ರೀ ಪದ್ಮನಾಭ ತೀರ್ಥರು ಶ್ರೀ ಸತ್ಯತೀರ್ಥರು ಉಡುಪಿಯ ಅಷ್ಟಮಠಗಳ ಮೂಲಯತಿಗಳು ಶಂಕರ ಪಂಡಿತಾಚಾರ್ಯರು ತ್ರಿವಿಕ್ರಮ ಪಂಡಿತಾಚಾರ್ಯರು ಕಲ್ಯಾಣಿ ದೇವಿ (ತ್ರಿವಿಕ್ರಮ ಪಂಡಿತಾಚಾರ್ಯರ ಸಹೋದರಿ) ಕಲ್ಯಾಣಿ ದೇವಿ (ಆಚಾರ್ಯ ಮಧ್ವರ ಸಹೋದರಿ) ಜಯಸಿಂಹ ರಾಜ ನಾರಾಯಣ ಪಂಡಿತಾಚಾರ್ಯರು ವಾಮನ ಪಂಡಿತಾಚಾರ್ಯರು(ತ್ರೈವಿಕ್ರಮಾರ್ಯರು) ಮಾಧವ ತೀರ್ಥರು ಅಕ್ಷೋಭ್ಯ ತೀರ್ಥರು ಈ ಲೇಖನಗಳನ್ನೂ ನೋಡಿ ಉಡುಪಿ ದ್ವೈತ | ದ್ವೈತ ದರ್ಶನ ವೇದಾಂತ ದ್ವೈತಮತ ಶ್ರೀಮನ್ಮಹಾಭಾರತಮ್ ಮತ್ತು ದ್ವೈತ ದರ್ಶನ ಹೊರಗಿನ ಸಂಪರ್ಕಗಳು ಶ್ರೀ ಮಧ್ವಾಚಾರ್ಯರ ಮತ್ತು ದ್ವೈತಮತದ ಬಗ್ಗೆ ಜಾಲಪುಟ ಶ್ರೀ ಮಧ್ವಾಚಾರ್ಯರ ಬಗ್ಗೆ ಲೇಖನ ಉಲ್ಲೇಖ ಇತಿಹಾಸ ಅಧ್ಯಾತ್ಮ ಹಿಂದೂ ಧರ್ಮ ಯೋಗಿಗಳು ಮತ್ತು ಸನ್ಯಾಸಿಗಳು ಹಿಂದೂ ಧರ್ಮದ ಸಂತರು
984
https://kn.wikipedia.org/wiki/%E0%B2%9C%E0%B3%8D%E0%B2%9E%E0%B2%BE%E0%B2%A8%E0%B2%AA%E0%B3%80%E0%B2%A0%20%E0%B2%AA%E0%B3%8D%E0%B2%B0%E0%B2%B6%E0%B2%B8%E0%B3%8D%E0%B2%A4%E0%B2%BF
ಜ್ಞಾನಪೀಠ ಪ್ರಶಸ್ತಿ
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು. ಈ ಪ್ರಶಸ್ತಿಯನ್ನು ಪ್ರಪ್ರಥಮವಾಗಿ ೧೯೬೫ರಲ್ಲಿ ಮಲೆಯಾಳಂ ಲೇಖಕ ಜಿ. ಶಂಕರ ಕುರುಪರಿಗೆ ಪ್ರದಾನ ಮಾಡಲಾಯಿತು. ವಿಜೇತರಿಗೆ ಪ್ರಶಸ್ತಿ ಫಲಕ, ೧೧ ಲಕ್ಷ ರೂಪಾಯಿ ಚೆಕ್ ಹಾಗೂ ವಾಗ್ದೇವಿಯ ಕಂಚಿನ ವಿಗ್ರಹವನ್ನು ನೀಡಿ ಗೌರವಿಸಲಾಗುವುದು. ಜ್ಞಾನಪೀಠದ ಹಿನ್ನೆಲೆ ಮತ್ತು ವಿವರ ಈ ಪ್ರಶಸ್ತಿಯನ್ನು ಸರಕಾರ ನೀಡುತ್ತದೆ ಎಂಬ ತಪ್ಪು ಕಲ್ಪನೆಯೂ ವ್ಯಾಪಕವಾಗಿದೆ. ವಾಸ್ತವದಲ್ಲಿ ಈ ಪ್ರಶಸ್ತಿಯನ್ನು ನೀಡುವವರು ಜ್ಞಾನಪೀಠ ಟ್ರಸ್ಟ್. ಟೈಂಸ್ ಆಫ್ ಇಂಡಿಯಾದ ಒಡೆತನವನ್ನು ಹೊಂದಿರುವ ಜೈನ್ ಕುಟುಂಬ ಜ್ಞಾನಪೀಠ ಟ್ರಸ್ಟ್ ನ ಸ್ಥಾಪಕರು. ಈಗಲೂ ಅದರ ಸದಸ್ಯರಲ್ಲಿ ಹೆಚ್ಚಿನವರು ಈ ಕುಟುಂಬಕ್ಕೆ ಸೇರಿದ್ದಾರೆ. ೧೯೮೨ ರಿಂದ, ಈ ಪ್ರಶಸ್ತಿಯನ್ನು ಭಾರತೀಯ ಸಾಹಿತ್ಯಕ್ಕೆ ಸಮಗ್ರ ಕೊಡುಗೆಯನ್ನು ನೀಡಿದ ಲೇಖಕರಿಗೆ ಸಂದಾಯವಾಗುತ್ತಿದೆ. ಈವರೆಗೆ ಹಿಂದಿ ಸಾಹಿತಿಗಳು ಹನ್ನೊಂದು ಪ್ರಶಸ್ತಿಗಳನ್ನು ಪಡೆದು ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಕನ್ನಡ ಭಾಷೆಯು ಎಂಟು ಪ್ರಶಸ್ತಿಯನ್ನು ಪಡೆದು ಎರಡನೆ ಸ್ಥಾನದಲ್ಲಿದೆ. ೧೯೮೨ರಿಂದ ಒಂದು ಕೃತಿಯ ಬದಲಿಗೆ ಸಮಗ್ರ ಸಾಹಿತ್ಯದ ಕೊಡುಗೆಯನ್ನು ಗಮನಿಸಿ ನೀಡಲಾಗುತ್ತಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ ಈ ಪುಟಗಳನ್ನೂ ನೋಡಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು ಭಾರತೀಯ ಜ್ಞಾನಪೀಠ ಸಂಸ್ಥೆ ಆಧುನಿಕ ಕಾವ್ಯ ಪ್ರಕಾರ;ಬಂಗಾಳದ ಕವಿ ಶಂಖ ಘೋಷ್‌ಗೆ ಜ್ಞಾನಪೀಠ;24 Dec, 2016 ಉಲ್ಲೇಖಗಳು 1.[೧೫]"Gujarati Litterateur Raghuveer Chaudhary honoured with 51st Jnanpith Award". mid-day. 2015-12-29. Retrieved 29 December 2015. 2.[೧೬]http://www.jagranjosh.com/current-affairs/noted-gujarati-writer-raghuveer-chaudhary-selected-for-51st-jnanpith-award-1451444947-1 ಸಾಹಿತ್ಯ ಪುರಸ್ಕಾರಗಳು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಭಾರತೀಯ ಪ್ರಶಸ್ತಿಗಳು
985
https://kn.wikipedia.org/wiki/%E0%B2%9C%E0%B3%8D%E0%B2%9E%E0%B2%BE%E0%B2%A8%E0%B2%AA%E0%B3%80%E0%B2%A0%20%E0%B2%AA%E0%B3%8D%E0%B2%B0%E0%B2%B6%E0%B2%B8%E0%B3%8D%E0%B2%A4%E0%B2%BF%20%E0%B2%AA%E0%B3%81%E0%B2%B0%E0%B2%B8%E0%B3%8D%E0%B2%95%E0%B3%83%E0%B2%A4%20%E0%B2%95%E0%B2%A8%E0%B3%8D%E0%B2%A8%E0%B2%A1%E0%B2%BF%E0%B2%97%E0%B2%B0%E0%B3%81
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ. ಉಲ್ಲೇಖಗಳು ಸಾಹಿತ್ಯ ಪ್ರಶಸ್ತಿಗಳು
987
https://kn.wikipedia.org/wiki/%E0%B2%AE%E0%B2%BE%E0%B2%B8%E0%B3%8D%E0%B2%A4%E0%B2%BF%20%E0%B2%B5%E0%B3%86%E0%B2%82%E0%B2%95%E0%B2%9F%E0%B3%87%E0%B2%B6%20%E0%B2%85%E0%B2%AF%E0%B3%8D%E0%B2%AF%E0%B2%82%E0%B2%97%E0%B2%BE%E0%B2%B0%E0%B3%8D
ಮಾಸ್ತಿ ವೆಂಕಟೇಶ ಅಯ್ಯಂಗಾರ್
ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಇವರು ಶ್ರೀನಿವಾಸ್ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.ಮಾಸ್ತಿ ಕನ್ನಡದ ಆಸ್ತಿ ಎಂದು ಪ್ರಖ್ಯಾತಿ ಹೊಂದಿದರು.ಇವರು ಸಣ್ಣ ಕಥೆಗಳ ಜನಕ ಎಂದು ಕರೆಯುತ್ತಾರೆ. ಬಾಲ್ಯ ಜೀವನ ಮಾಸ್ತಿ ವೆಂಕಟೇಶ ಅಯ್ಯಂಗಾರರು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಜೂನ್ ೬ ೧೮೯೧ ರಂದು ಜನಿಸಿದರು. ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾರರು "ಪೆರಿಯಾತ್" ಎಂಬ ಮನೆತನದವರು. ಇದರ ಅರ್ಥ ದೊಡ್ಡ ಮನೆಯವರು ಎಂದು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು. ಅವರ ಹಿರಿಯರು ಬಹು ಜನಕ್ಕೆ ಅನ್ನ ಹಾಕಿ ಹೆಸರು ಗಳಿಸಿದ್ದರಾದರೂ ಅವರು ವಾರದ ಮನೆಗಳಲ್ಲಿ ಊಟಮಾಡಿ ವಿದ್ಯಾಭ್ಯಾಸ ಮಾಡಬೇಕಾಯಿತು. ಹೊಂಗೇನಳ್ಳಿ, ಯಲಂದೂರು, ಶಿವಾರಪಟ್ಟಣ, ಮಳವಳ್ಳಿ, ಮೈಸೂರು, ಕಡೆಗೆ ಮದರಾಸು ಹೀಗೆ ನಾನಾ ಕಡೆಗಳಲ್ಲಿ ತಮ್ಮ ಬಂಧುಗಳ ನೆರವಿನಿಂದ ವಿದ್ಯಾಭ್ಯಾಸ ಮಾಡಿ ಎಂ.ಎ ಪದವಿ ಗಳಿಸಿದರು. ತಮ್ಮ ವಿದ್ಯಾಭ್ಯಾಸ ಕಾಲದಲ್ಲಿ ಮಾಸ್ತಿ ಯಾವ ಪರೀಕ್ಷೆಯಲ್ಲೂ ಪ್ರಥಮ ಸ್ಥಾನ ವನ್ನು ಬೇರೆಯವರಿಗೆ ಬಿಟ್ಟುಕೊಡಲಿಲ್ಲ. ಮದ್ರಾಸಿನಲ್ಲಿ ಇಂಗ್ಲೀಷ್ ಎಂ.ಎ ಮಾಡಿಕೊಂಡು ಚಿನ್ನದ ಪದಕ ಗಳಿಸಿದ ಮಾಸ್ತಿ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸುಮಾರು ಒಂದೂವರೆ ತಿಂಗಳು ಉಪಾಧ್ಯಾಯರಾಗಿದ್ದು ಬೆಂಗಳೂರಿಗೆ ಬಂದು ಸಿವಿಲ್ ಪರೀಕ್ಷೆಗೆ ಕುಳಿತು ಅಲ್ಲಿಯೂ ಪ್ರಥಮರಾಗಿ ತೇರ್ಗಡೆಯಾದರು. ಸರ್ಕಾರದಲ್ಲಿ ಅಸಿಸ್ಟೆಂಟ್ ಕಮೀಶನರಾಗಿ ಕೆಲಸಕ್ಕೆ ಸೇರಿ ಸಮರ್ಪಕವಾಗಿ ಕೆಲಸ ನಿರ್ವಹಿಸಿದರು. ಸಾಹಿತ್ಯ ರಚನೆ ಅವರ ಪ್ರವೃತ್ತಿಯಾಗಿ ಬೆಳೆಯಿತು. ಮೆಟ್ರಿಕ್ಯುಲೇಷನ್(೧೯೦೭), ಎಫ್.ಎ (೧೯೦೯), ಬಿ.ಎ (ಮದರಾಸು ವಿಶ್ವವಿದ್ಯಾಲಯ ೧೯೧೨), ಮೈಸೂರು ಸಿವಿಲ್ ಸರ್ವಿಸ್ (೧೯೧೩), ಎಂ.ಎ (ಮದರಾಸು ವಿಶ್ವವಿದ್ಯಾಲಯ ೧೯೧೪) ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ, ೧೯೧೪ ರಲ್ಲಿ ಮೈಸೂರು ಸರ್ಕಾರದಲ್ಲಿ ಅಸಿಸ್ಟೆಂಟ್ ಕಮಿಷನರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ೧೯೧೪ ರಿಂದ ೧೯೪೩ ರವರೆಗೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿವೃತ್ತರಾದರು. ೧೯೨೦ ರಲ್ಲಿ ಅವರ ಮೊದಲ ಪುಸ್ತಕ ಕೆಲವು ಸಣ್ಣ ಕಥೆಗಳು ಪ್ರಕಟಗೊಂಡಿತು. ಸಣ್ಣಕತೆ, ನೀಳ್ಗತೆ, ಕಾದಂಬರಿ, ಕಾವ್ಯ, ನಾಟಕ, ಜೀವನ ಚರಿತ್ರೆ, ಪ್ರಬಂಧ, ವಿಮರ್ಶೆ, ಸಂಪಾದನೆ, ಅನುವಾದ - ಹೀಗೆ ಕನ್ನಡ ಸಾಹಿತ್ಯದ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ. ೧೯೮೩ ರಲ್ಲಿ ಚಿಕವೀರ ರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಮಾಸ್ತಿಯವರು ಕನ್ನಡಕ್ಕೆ ನಾಲ್ಕನೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟರು. ಜೀವನ ಪರ್ಯಂತ ಕನ್ನಡ ಸೇವೆಯನ್ನು ಮಾಡಿದ ಮಾಸ್ತಿಯವರು ಜೂನ್ ೬ ೧೯೮೬ ರಂದು ನಿಧನ ಹೊಂದಿದರು. ಸಾಹಿತ್ಯ ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು. ೧೯೧೦ ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ 'ಮಾತುಗಾರ ರಾಮಣ್ಣ' ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩. ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, "ಜೀವನ" ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ. ೨೦ನೆಯ ಶತಮಾನದ ಆರಂಭದ ಕಾಲ. ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು. ಸಣ್ಣ ಕತೆಗಳ ರಚನೆ ಅವರು ಪ್ರಧಾನವಾಗಿ ಆರಿಸಿಕೊಂಡ ಸಾಹಿತ್ಯ ಪ್ರಕಾರ. ಶ್ರೀನಿವಾಸ ಎಂಬ ಕಾವ್ಯನಾಮದಲ್ಲಿ ಮಾಸ್ತಿ ನೂರಾರು ಸಣ್ಣ ಕತೆಗಳನ್ನು ಬರೆದರು. ಹಲವಾರು ಕಥಾ ಸಂಕಲನಗಳನ್ನು ಪ್ರಕಟಿಸಿದರು. ಅವರ ಒಂದು ಸಣ್ಣಕಥೆಯನ್ನು ರಾಜಾಜಿಯವರು ತಮಿಳಿಗೆ ಅನುವಾದಿಸಿದರು. ಇಂಗ್ಲೀಷ್ ಹಾಗೂ ಇತರ ಭಾರತೀಯ ಭಾಷೆಗಳಿಗೆ ಮಾಸ್ತಿ ಅವರ ಸಣ್ಣ ಕತೆಗಳು ಅನುವಾದಗೊಂಡಿವೆ. ದೂರದರ್ಶನದಲ್ಲಿ ಕೆಲವು ಕತೆಗಳು ಅಭಿನಯಿಸಲ್ಪಟ್ಟು ಪ್ರಸಾರವಾಗಿವೆ. *ಕಥೆ ಹೇಳುವುದರಲ್ಲಿ ಮಾಸ್ತಿ ಎತ್ತಿದ ಕೈ. ಅವರ ಕಥೆಗಳನ್ನು ಓದುತ್ತಿದ್ದರೆ ಅವು ಕಣ್ಣಿಗೆ ಕಟ್ಟಿದಂತಿರುತ್ತವೆ. "ಸುಬ್ಬಣ್ಣ" ಅವರ ಒಂದು ಖ್ಯಾತ ನೀಳ್ಗತೆ. ಅಪಾರ ಮಾನವೀಯ ಅಂತಃಕರಣವನ್ನು ಕತೆಯಲ್ಲಿ ತುಳುಕಿಸಿದ ಅವರು ಕಥೆಗಳ ರಚನೆಗೆ ಬಳಸಿದ ತಂತ್ರ ಅಪರೂಪದ್ದಾಗಿದೆ. ಸಣ್ಣ ಕಥೆಗಳ ಜನಕರೆಂದೇ ಅವರಿಗೆ ಕರೆಯುತ್ತಿದ್ದ ರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಅವರ ಕಥೆಗಳ ಸಂಕಲನಗಳಿಗೆ ಲಭಿಸಿತು. ಕಥೆ ಹೇಳುವುದು ಒಂದು ಪುಣ್ಯದ ಕೆಲಸವೆಂದು ಅವರು ಭಾವಿಸಿದ್ದರು. ಮಾಸ್ತಿ ಕಥೆಗಳನ್ನು ಬರೆದಂತೆಯೇ ಕಾದಂಬರಿ, ಕವಿತೆ, ಪ್ರಬಂಧ ಇವುಗಳನ್ನೂ ಬರೆದರು, ನಾಟಕಗಳನ್ನೂ ರಚಿಸಿದರು. ಅವರ ಎಲ್ಲ ಕೃತಿಗಳಲ್ಲೂ ಕುಶಲತೆ, ಸೌಮ್ಯತೆ, ಜೀವನ ದರ್ಶನಗಳನ್ನು ಸ್ಪಷ್ಟವಾಗಿ ಕಾಣಬಹುದು. "ಭಾರತತೀರ್ಥ", "ಆದಿಕವಿ ವಾಲ್ಮೀಕಿ" ಇವು ಭಾರತ ರಾಮಾಯಣಗಳನ್ನು ಕುರಿತು ಬರೆದಿರುವ ಗ್ರಂಥಗಳಾದರೆ "ಶ್ರೀರಾಮ ಪಟ್ಟಾಭಿಷೇಕ" ಅವರ ಒಂದು ಕಾವ್ಯ. ರವೀಂದ್ರನಾಥ ಠಾಕೂರ್, ರಾಮಕೃಷ್ಣ ಪರಮಹಂಸರ ಜೀವನ ಚರಿತ್ರೆಗಳನ್ನೂ, ಪುರಂದರದಾಸ, ಕನಕದಾಸ, ಅನಾರ್ಕಳಿ, ತಿರುಪಾಣಿ, ಶಿವಾಜಿ ಮೊದಲಾದ ನಾಟಕಗಳನ್ನೂ, ಷೇಕ್ಸ್‌ಪಿಯರನ ನಾಟಕಗಳ ಅನುವಾದಗಳನ್ನೂ ಮಾಸ್ತಿ ಪ್ರಕಟಿಸಿದ್ದಾರೆ. ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ - ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು "ಚನ್ನಬಸವನಾಯಕ". "ಭಾವ" - ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥಮುಖ್ಯ ಕೃತಿಗಳು, ಸಣ್ಣ ಕಥೆ ಸಂಗ್ರಹ ಸಣ್ಣಕತೆಗಳ(೫ ಪುಟಗಳು) ರಂಗನ ಮದುವೆ ಮಾತುಗಾರ ರಾಮ ನೀಳ್ಗತೆ ಸುಬ್ಬಣ್ಣ (೧೯೨೮) ಶೇಷಮ್ಮ(೧೯೭೬) ಕಾವ್ಯ ಸಂಕಲನಗಳು ಬಿನ್ನಹ, ಮನವಿ(೧೯೨೨) ಅರುಣ(೧೯೨೪) ತಾವರೆ(೧೯೩೦) ಸಂಕ್ರಾಂತಿ(೧೯೬೯) ನವರಾತ್ರಿ(೫ ಭಾಗ ೧೯೪೪-೧೯೫೩) ಚೆಲುವು, ಸುನೀತ ಮಲಾರ ಶ್ರೀರಾಮ ಪಟ್ಟಾಭಿಷೇಕ (ಖಂಡಕಾವ್ಯ) ಜೀವನ ಚರಿತ್ರೆ ರವೀಂದ್ರನಾಥ ಠಾಕೂರ್(೧೯೩೫) ಶ್ರೀ ರಾಮಕೃಷ್ಣ(೧೯೩೬) ಪ್ರಬಂಧ ಕನ್ನಡದ ಸೇವೆ(೧೯೩೦) ವಿಮರ್ಶೆ (೪ ಸಂಪುಟ ೧೯೨೮-೧೯೩೯) ಜನತೆಯ ಸಂಸ್ಕೃತಿ(೧೯೩೧) ಜನಪದ ಸಾಹಿತ್ಯ(೧೯೩೭) ಆರಂಭದ ಆಂಗ್ಲ ಸಾಹಿತ್ಯ(೧೯೭೯) ನಾಟಕ ಶಾಂತಾ, ಸಾವಿತ್ರಿ, ಉಷಾ (೧೯೨೩) ತಾಳೀಕೋಟೆ(೧೯೨೯) ಶಿವಛತ್ರಪತಿ(೧೯೩೨) ಯಶೋಧರಾ(೧೯೩೩) ಕಾಕನಕೋಟೆ(೧೯೩೮) ಲಿಯರ್ ಮಾಹಾರಾಜ ಚಂಡಮಾರುತ, ದ್ವಾದಶರಾತ್ರಿ ಹ್ಯಾಮ್ಲೆಟ್ ಶೇಕ್ಸ್ ಪಿಯರ್ ದೃಶ್ಯಗಳು ೧,೨,೩ ಪುರಂದರದಾಸ ಕನಕಣ್ಣ ಕಾಳಿದಾಸ ಅಜ್ಜನದಾರಿ, ಭಟ್ಟರಮಗಳು, ವಿಮಲಾ ಮರಿಯಾನ್ ಬಾನುಲಿ ದೃಶ್ಯಗಳು ಕಾದಂಬರಿ ಚೆನ್ನಬಸವ ನಾಯಕ(೧೯೫೦) ಚಿಕವೀರ ರಾಜೇಂದ್ರ(೧೯೫೬) ಪ್ರಶಸ್ತಿಗಳು ಜ್ಞಾನಪೀಠ ಪ್ರಶಸ್ತಿ (೧೯೮೩) (ಚಿಕವೀರ ರಾಜೇಂದ್ರ ಕೃತಿಗೆ) ಮೈಸೂರು ವಿಶ್ವವಿದ್ಯಾಲಯದ ಡಿ. ಲಿಟ್(೧೯೭೭) ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್(೧೯೫೬) ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(೧೯೬೮) ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ(೧೯೫೩) ದಕ್ಷಿಣ ಭಾರತ ಸಾಹಿತ್ಯಗಳ ಸಮ್ಮೇಳನ ಅಧ್ಯಕ್ಷ ಪದವಿ(೧೯೪೬) ಗೌರವಗಳು ಮಾಸ್ತಿ ಅವರಿಗೆ ಸಂದ ಗೌರವ, ಪ್ರಶಸ್ತಿಗಳು ಅಪಾರ. "ಮಾಸ್ತಿ ಕನ್ನಡದ ಆಸ್ತಿ" ಎಂಬ ಹೇಳಿಕೆ ಒಂದು ನಾಣ್ಣುಡಿಯಾಗಿದೆ. ಎಲ್ಲ ಸಾಹಿತಿಗಳಿಗೂ ಅವರು "ಅಣ್ಣ ಮಾಸ್ತಿ"ಯಾಗಿದ್ದರು. ವರಕವಿ ದ ರಾ ಬೇಂದ್ರೆ ಮಾಸ್ತಿಯವರನ್ನು ಹಿರಿಯಣ್ಣ ಎಂದು ಗೌರವಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಾಸ್ತಿ ಸೇವೆ ಸಲ್ಲಿಸಿದರು. ೧೯೨೯ರಲ್ಲಿ ಬೆಳಗಾವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕರ್ನಾಟಕ ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು. ಮೈಸೂರು ಮಹಾರಾಜರು "ರಾಜಸೇವಾ ಪ್ರಸಕ್ತ" ಎಂದು ಗೌರವಿಸಿದ್ದರು. ೧೯೭೨ರಲ್ಲಿ " ಶ್ರೀನಿವಾಸ " ಎಂಬ ಅವರ ಅಭಿನಂದನಾ ಗ್ರಂಥ ಪ್ರಕಟವಾಯಿತು. ಈ ಪುಟಗಳನ್ನೂ ನೋಡಿ ಜ್ಞಾನಪೀಠ ಪ್ರಶಸ್ತಿ ಹೊರಗಿನ ಕೊಂಡಿಗಳು ಮಾಸ್ತಿಯವರ ವಿವರಗಳನ್ನುಳ್ಳ ಜಾಲತಾಣ-ಎಂ. ವಿ. ಜೆ. ಕೆ. ಟ್ರಸ್ಟ್ ಸುಬ್ಬಣ್ಣ (ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದ ಜಾಲತಾಣದಲ್ಲಿ ಓದಲು ಸಿಗುವ ಪುಸ್ತಕ) ಕನ್ನಡದ ಆಸ್ತಿ 'ಶ್ರೀನಿವಾಸ' ಎಂಬ ಮಾಸ್ತಿ - ಕನ್ನಡರತ್ನ.ಕಾಂ ವರ್ಗ:ಮಾಸ್ತಿಯವರ ಕೃತಿಗಳು ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು
1004
https://kn.wikipedia.org/wiki/%E0%B2%B2%E0%B2%BE%E0%B2%B2%E0%B3%8D%20%E0%B2%AC%E0%B2%B9%E0%B2%BE%E0%B2%A6%E0%B3%81%E0%B2%B0%E0%B3%8D%20%E0%B2%B6%E0%B2%BE%E0%B2%B8%E0%B3%8D%E0%B2%A4%E0%B3%8D%E0%B2%B0%E0%B2%BF
ಲಾಲ್ ಬಹಾದುರ್ ಶಾಸ್ತ್ರಿ
ಲಾಲ್ ಬಹಾದುರ್ ಶಾಸ್ತ್ರಿ (ಅಕ್ಟೋಬರ್ ೦೨, ೧೯೦೪ - ಜನವರಿ ೧೧, ೧೯೬೬) ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವಾತಂತ್ರ್ಯಕ್ಕೆ ಅವಿರತವಾಗಿ ಹೋರಾಡಿದವರು. ಜೀವನ ಲಾಲ್ ಬಹಾದ್ದೂರ್ ಮೊಘಲ್‌ ಸಾರಾಯ್‌ನಲ್ಲಿ ಜನಿಸಿದ್ದು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು. ೧೯೨೬ ರಲ್ಲಿ ಇವರಿಗೆ ಶಾಸ್ತ್ರಿ ಎಂಬ ಬಿರುದು ಕಾಶಿ ವಿದ್ಯಾ ಪೀಠದಿಂದ ಕೊಡಲ್ಪಟ್ಟಿತು. ಒಟ್ಟು ೯ ವರ್ಷಗಳ ಕಾಲ ಸ್ವಾತಂತ್ರ್ಯಕ್ಕಾಗಿ ಕಾರಾಗೃಹವಾಸ ಅನುಭವಿಸಿದ ಇವರು ಸತ್ಯಾಗ್ರಹ ಚಳುವಳಿ ಪ್ರಾರಂಭವಾದ ನಂತರ ೧೯೪೬ ರವರೆಗೂ ಜೈಲು ಶಿಕ್ಷೆ ಅನುಭವಿಸಿದರು. ಗಾಂಧೀಜಿಯವರ ಜನ್ಮದಿನ‌ದಂದೇ ಜನ್ಮದಿನ. ಭಾರತ ಸರಕಾರಕ್ಕೆ ಸಲ್ಲಿಸಿದ ಸೇವೆ ಸ್ವಾತಂತ್ರ ದೊರಕಿದ ಬಳಿಕ ಇವರು ಗೋವಿ೦ದ ವಲ್ಲಭ ಪ೦ತ್ ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು. ೧೯೫೧ರಲ್ಲಿ ಇವರು ಲೋಕ ಸಭೆಗೆ ಜನರಲ್ ಸೆಕ್ರೆಟರಿ ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು. ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ಖಾತೆಗೆ ರಾಜೀನಾಮೆ ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್‌ಗೆ ಮರಳಿದರು. ಮೊದಲು ಸಾರಿಗೆ ಮಂತ್ರಿ ಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿದ್ದರು. ಮೇ ೨೭, ೧೯೬೪ರಂದು ಜವಾಹರ್‌ಲಾಲ್ ನೆಹರು ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು. ಸ್ವಲ್ಪ ಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್‌ನ ಕೆಲವು ಪ್ರಮುಖ ಆಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ ೯ ರಂದು ಭಾರತದ ಪ್ರಧಾನಿಯಾದರು. ಪ್ರಧಾನಿಯಾಗಿ ಲಾಲ್ ಬಹಾದುರ್ ಶಾಸ್ತ್ರಿಗಳು ಆಗಿನ ಪ್ರಮುಖ ಸಮಸ್ಯೆ ಪಾಕಿಸ್ತಾನವಾಗಿತ್ತು. ಕಚ್ ಬಳಿ ನಡೆದ ಯುದ್ಧ ಯುಎನ್ ಮಧ್ಯಸ್ಥಿಕೆಯಿಂದ ನಿಂತು ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಾರಂಭವಾಯಿತು. ಎರಡನೇ ಭಾರತ-ಪಾಕ್ ಯುದ್ಧ ಪ್ರಾರಂಭವಾಗಿ ಭಾರತದ ಪಡೆ ಲಾಹೋರ್ ತಲುಪುತ್ತಲೇ ಶಾಂತಿ ಒಪ್ಪಂದ ಮಾಡಿ ಕೊಳ್ಳಲಾಯಿತು. ಜನವರಿ ೧೯೬೬ರಲ್ಲಿ ಶಾಸ್ತ್ರಿ ಮತ್ತು ಮಹಮ್ಮದ್ ಆಯೂಬ್ ಖಾನ್ ಅಲೆಕ್ಸೈ ನಿಕೊಲಯೆವಿಚ್ ಕೊಸಿಜಿನ್ ಅವರಿಂದ ಆಯೋಜಿಸಲಾದ ಟಾಷ್ಕೆಂಟ್‌ನಲ್ಲಿ ನಡೆದ ಮಾತುಕತೆಯಲ್ಲಿ ಭಾಗವಹಿಸಿದರು. ಶಾಸ್ತ್ರಿಗಳು ಭಾರತದೊಂದಿಗೆ ಜನವರಿ ೧೦ ರಂದು ಒಂದು ಒಪ್ಪಂದಕ್ಕೆ ಸಹಿ ಹಾಕಿದರು. ಅದೇ ಟಾಶ್ಕೆಂಟ್ ಡಿಕ್ಲೆರೇಶನ್. ಮರುದಿನವೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದರು; ಆದರೆ ಪಾಕಿಸ್ತಾನದವರೇ ಅವರ ಊಟದಲ್ಲಿ ವಿಷವನ್ನು ಹಾಕಿ ಕೊಂದರು ಎಂಬ ಊಹೆ ಇದೆ. ಆದರೆ ಅದನ್ನು ಅಲ್ಲಿಯ ವೈದ್ಯರು ದೃಡಪಡಿಸಿಲ್ಲ. ಇವರು ಕಾರ್ಯಕಾಲದಲ್ಲಿ ದೇಶದಾಚೆ ಸಾವನ್ನಪ್ಪಿದ ಏಕೈಕ ಭಾರತದ ಪ್ರಧಾನ ಮಂತ್ರಿ ಹಾಗು ಈ ತರಹದ ದುರಂತಕ್ಕೆ ತುತ್ತಾದ ಇತಿಹಾಸದ ಬಹುಶಃ ಕೆಲವೇ ಕೆಲವು ಸರಕಾರದ ಮುಖ್ಯಸ್ಥರಲ್ಲಿ ಒಬ್ಬರು. ಪ್ರಾಮಾಣಿಕ, ಸ್ವಾಭಿಮಾನಿ ಇವರು ಬಹುಶಃ ಭಾರತ ಕಂಡ ಅತ್ಯಂತ ಪ್ರಾಮಾಣಿಕ, ದಕ್ಷ ಪ್ರಧಾನಿಯಾಗಿದ್ದಾರೆ. ಇವರ ಪ್ರಾಮಾಣಿಕತೆಗೆ ಹಲವರು ತಲೆದೂಗಿದ್ದುಂಟು. ಹಾಗೆಯೇ ಇವರ ಸ್ವಾಭಿಮಾನ, ದೇಶಾಭಿಮಾನ ಕೂಡ ತಲೆದೂಗುವಂಹತದ್ದು. ಶಾಸ್ತ್ರಿ ಸೋಮವಾರ ಇವರು ಭಾರತವನ್ನು ಸ್ವಾಭಿಮಾನಿ ದೇಶವಾಗಿ ಮಾಡುವಲ್ಲಿ ಶ್ರಮವಹಿಸಿದ್ದಾರೆ. ಅವರು ಪ್ರಧಾನಿಯಾದ ಸಂದರ್ಭದಲ್ಲಿ ದೇಶದಲ್ಲಿ ಬರಗಾಲ ಬಂದೊದಗಿತು. ಆಗ ಹೊರ ದೇಶದಿಂದ ಆಹಾರವನ್ನು ಆಮದು ಮಾಡಿಕೊಳ್ಳಬೇಕಾಯಿತು. ಸಾಲ ಭಾರ ಅಧಿಕವಾಯಿತು. ಅದನ್ನರಿತ ಶಾಸ್ತ್ರಿ ವಾರದಲ್ಲಿ ಒಂದು ದಿನ ಊಟವನ್ನು ಬಿಟ್ಟರೆ ಎಷ್ಟು ಆಹಾರ ಸಂಗ್ರಹ ವಾಗುವುದೆಂದು ಲೆಕ್ಕಾಚಾರಹಾಕಿ, ಸೋಮವಾರ ರಾತ್ರಿ ಊಟವನ್ನು ಬಿಡಲು ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಾವೂ ಸಹ ಸೋಮವಾರದ ಊಟವನ್ನು ತ್ಯಜಿಸಿದರು. ಇನ್ನೂ ಸಹ ಶಾಸ್ತ್ರಿಯವರ ಸೋಮವಾರವು ಪ್ರಚಲಿತದಲ್ಲಿದೆ. ಈ ನಿರ್ಣಯವು ಅವರ ಸ್ವಾಭಿಮಾನ ಯಾತ್ರೆಗೆ ಮುಕುಟ ಪ್ರಾಯದಂತಿದೆ. ಪ್ರಶಸ್ತಿಗಳು ಇವರಿಗೆ ಮರಣಾನಂತರ ಭಾರತ ರತ್ನವನ್ನು ಪ್ರಧಾನ ಮಾಡಲಾಯಿತು. ಇವರ ಸ್ಮರಣೆಗೆ ದೆಹಲಿಯಲ್ಲಿ ಸ್ಮಾರಕವೊಂದನ್ನು ನಿರ್ಮಿಸಲಾಗಿದೆ. ಇವರ ಜನಪ್ರಿಯ ವಾಕ್ಯ ಜೈ ಜವಾನ್, ಜೈ ಕಿಸಾನ್ ಇಂದಿಗೂ ಚಿರವಾಗಿ ಉಳಿದಿದೆ. ನೋಡಿ $$ಬಹಾದ್ದೂರ್‌ ಶಾಸ್ತ್ರಿ ಸಾವಿನ ಚಿದಂಬರ ರಹಸ್ಯ;11 Jan, 2017 ಹೊರಗಿನ ಸಂಪರ್ಕಗಳು ಲಾಲ್ ಬಹಾದುರ್ ಶಾಸ್ತ್ರಿಗಳ ಮನೆ ಸ್ಮಾರಕವಾಗಿ ಪರಿವರ್ತಿಸಲಾಗುತ್ತಿದೆ ಉಲ್ಲೇಖ ಲಾಲ್ ಬಹಾದುರ್ ಶಾಸ್ತ್ರಿ ಭಾರತ ರತ್ನ ಪುರಸ್ಕೃತರು ಭಾರತೀಯ ಇತಿಹಾಸದ ಪ್ರಮುಖರು ಭಾರತದ ಪ್ರಧಾನ ಮಂತ್ರಿಗಳು ೧೯೦೪ ಜನನ ೧೯೬೬ ನಿಧನ
1007
https://kn.wikipedia.org/wiki/%E0%B2%9C%E0%B2%BE%E0%B2%B0%E0%B3%8D%E0%B2%9C%E0%B3%8D%20%E0%B2%A1%E0%B2%AC%E0%B3%8D%E0%B2%B2%E0%B3%8D%E0%B2%AF%E0%B3%81.%20%E0%B2%AC%E0%B3%81%E0%B2%B7%E0%B3%8D
ಜಾರ್ಜ್ ಡಬ್ಲ್ಯು. ಬುಷ್
ಜಾರ್ಜ್ ವಾಕರ್ ಬುಷ್ (ಜನನ: ಜುಲೈ ೬, ೧೯೪೬) ಅಮೇರಿಕ ಸಂಯುಕ್ತ ಸಂಸ್ಥಾನದ ಪ್ರಸಕ್ತ ಹಾಗೂ ೪೩ನೆಯ ಅಧ್ಯಕ್ಷರು. ಅವರ ಮೊದಲ ನಾಲ್ಕು ವರ್ಷಗಳ ಅಧ್ಯಕ್ಷತಾ ಅವಧಿ ಪ್ರಾರ೦ಭವಾದದ್ದು ಜನವರಿ ೨೦, ೨೦೦೧ ರಂದು. ತೀವ್ರವಾದ ಚುನಾವಣೆಯ ನಂತರ ಇನ್ನೊಂದು ಅವಧಿಗೆ ಅವರು ನವೆಂಬರ್ ೩, ೨೦೦೪ ರಂದು ಪ್ರಮುಖ ಎದುರಾಳಿ ಜಾನ್ ಕೆರಿ ಅವರನ್ನು ಸೋಲಿಸಿ ಪುನರಾಯ್ಕೆಯಾದರು. ಅವರ ಎರಡನೆಯ ಅಧ್ಯಕ್ಷತಾ ಅವಧಿ ಕೊನೆಗೊಳ್ಳುವುದು ಜನವರಿ ೨೦, ೨೦೦೯ ರಂದು. ಅಧ್ಯಕ್ಷತೆ ವಹಿಸಿಕೊಳ್ಳುವ ಮೊದಲು ಅವರು ಉದ್ಯಮಿಯಾಗಿದ್ದರು. ೧೯೯೫ ರಿಂದ ೨೦೦೦ ದ ವರೆಗೆ ಟೆಕ್ಸಸ್ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅವರು ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಹರ್ಬರ್ಟ್ ವಾಕರ್ ಬುಷ್ ಅವರ ಪುತ್ರ ಹಾಗೂ ಫ್ಲಾರಿಡಾ ರಾಜ್ಯದ ರಾಜ್ಯಪಾಲರಾದ ಜೆಬ್ ಬುಷ್ ಅವರ ಅಣ್ಣ. ವೈಯಕ್ತಿಕ ಜೀವನ ಲಾರಾ ಲೇನ್ ವೆಲ್ಚ್ ರವರನ್ನು ನವೆಂರಬರ್ ೫ರ ೧೯೭೭ರಂದು ಮದುವೆಯಾದರು. ಅಮೇರಿಕ ಸಂಯುಕ್ತ ಸಂಸ್ಥಾನದ ರಾಷ್ಟ್ರಪತಿಗಳು
1014
https://kn.wikipedia.org/wiki/%E0%B2%A7%E0%B2%B0%E0%B2%AE%E0%B3%8D%20%E0%B2%B8%E0%B2%BF%E0%B2%82%E0%B2%97%E0%B3%8D
ಧರಮ್ ಸಿಂಗ್
ಧರಮ್ ಸಿಂಗ್ ಭಾರತದ ಕರ್ನಾಟಕ ರಾಜ್ಯದ ೧೭ನೆ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು . ಗುಲ್ಬರ್ಗ ಜಿಲ್ಲೆಯ, ಜೇವರಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ ೧೯೩೬ ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂ.ಎ. ಹಾಗು ಎಲ್.ಎಲ್.ಬಿ. ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ ೬೦ ರ ದಶಕದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದರು. ಗುಲ್ಬರ್ಗ ಜಿಲ್ಲೆಯ ಜೇವರಗಿ ವಿಧಾನಸಭಾ ಕ್ಷೇತ್ರದಿಂದ ಸತತ ಎಂಟು ಬಾರಿ ಚುನಾಯಿತರಾಗಿದ್ದಾರೆ. ೧೯೮೦ ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು. ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಲೋಕೋಪಯೊಗಿ ಖಾತೆಯನ್ನು ನಿರ್ವಹಿಸಿದ್ದರು. ಇದಕ್ಕಿಂತ ಮೊದಲು ಗೃಹ ಖಾತೆ, ಸಮಾಜ ಸುಧಾರಣಾ ಖಾತೆ, ಅಬಕಾರಿ ಖಾತೆ, ಆದಾಯ ಖಾತೆ ಮೊದಲಾದ ಖಾತೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಯ ಅಧ್ಯಕ್ಷತೆಯನ್ನು ಸಹ ವಹಿಸಿದ್ದರು. ರಾಜಕೀಯ ಪ್ರವೇಶ ತಮ್ಮ 24, 25 ನೇ ವಯಸ್ಸಿನಲ್ಲಿ ಕಾಂಗ್ರೆಸ್ ನೊಂದಿಗೆ ಅಧಿಕೃತವಾಗಿ ಗುರುತಿಸಿಕೊಂಡರು 1968 ರಿಂದ 1988 ರವರೆಗೆ ಸಿಟಿ ಕೌನ್ಸಿಲ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ರು. 1978 ರಲ್ಲಿ ಮೊದಲ ಬಾರಿಗೆ ಜೇವರ್ಗಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ ವಿಧಾನಸಭೆ ಪ್ರವೇಶ 1980 ರಲ್ಲಿ ಕಲ್ಬುರ್ಗಿ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಲೋಕಸಭೆ ಪ್ರವೇಶ . 1983 ,1985,1989 ,1994 ,1999,2004 , ರಲ್ಲಿ ಜೇವರ್ಗಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ 2004 ಮೇ 28 ರಂದು ಕರ್ನಾಟಕದ 17 ನೇ ಮುಖ್ಯಮಂತ್ರಿಯಾಗಿ ಅಧಿಕಾರ 2006 ಜನವರಿ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ 2008 ರಲ್ಲಿ ಜೇವರ್ಗಿ ಕ್ಷೇತ್ರದಿಂದ ಸ್ಪರ್ಧಿಸಿ ಎಂಟನೇ ಬಾರಿ ವಿಧಾನಸಭೆ ಪ್ರವೇಶ ಮಾಡುವ ಕನಸಿಗೆ ಭಗ್ನ. ಈ ಬಾರಿ ಸೋಲು. 2009 ರಲ್ಲಿ ಬೀದರ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು 2014 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸೋಲು 2006-2007: ಪ್ರತಿಪಕ್ಷ ನಾಯಕ, ಕರ್ನಾಟಕ ವಿಧಾನಸಭೆ 2009 ರಿಂದ: ಸಂಸತ್ತಿನ ಸದಸ್ಯ ಉಲ್ಲೇಖಗಳು ರಾಜಕೀಯ ಕರ್ನಾಟಕದ ಮುಖ್ಯಮಂತ್ರಿಗಳು ಕರ್ನಾಟಕದ ರಾಜಕೀಯ ೧೯೩೬ ಜನನ ಕರ್ನಾಟಕದ ವಿಧಾನಸಭಾ ಸದಸ್ಯರು ಕರ್ನಾಟಕದ ಲೋಕ ಸಭೆ ಸದಸ್ಯರುಕರ್ನಾಟಕ ರಾಜಕಾರಣಿಗಳು
1016
https://kn.wikipedia.org/wiki/%E0%B2%B5%E0%B2%B2%E0%B3%8D%E0%B2%B2%E0%B2%AD%E0%B3%8D%E2%80%8C%E0%B2%AD%E0%B2%BE%E0%B2%AF%E0%B2%BF%20%E0%B2%AA%E0%B2%9F%E0%B3%87%E0%B2%B2%E0%B3%8D
ವಲ್ಲಭ್‌ಭಾಯಿ ಪಟೇಲ್
ಸರ್ದಾರ್ ವಲ್ಲಭಭಾಯಿ ಪಟೇಲ್ (ಅಕ್ಟೋಬರ್ ೩೧, ೧೮೭೫ - ಡಿಸೆಂಬರ್ ೧೫, ೧೯೫೦), ಸರ್ದಾರ್ ಪಟೇಲ್ ಎಂದೇ ಕರೆಯಲಾಗುವ, ಭಾರತದ ಪ್ರಮುಖ ರಾಜಕೀಯ ವ್ಯಕ್ತಿಗಳಲ್ಲೊಬ್ಬರು. ಭಾರತದ ಪ್ರಪ್ರಥಮ ಉಪಪ್ರಧಾನ ಮಂತ್ರಿ ಹಾಗೂ ಗೃಹಸಚಿವರಾಗಿದ್ದರು. ಅವರೊಬ್ಬ ವಕೀಲ(ಬ್ಯಾರಿಸ್ಟರ್) ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಹಿರಿಯ ಮುಖಂಡರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಮಾತ್ರವಲ್ಲದೇ, ಭಾರತದ ಗಣರಾಜ್ಯದ ಸ್ಥಾಪನೆ ಮತ್ತು ಸ್ವತಂತ್ರ ರಾಷ್ಟ್ರದೊಳಗಿನ ಏಕೀಕರಣದಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಿದರು. ಭಾರತ ಮತ್ತು ಇತರೆ ಕಡೆಗಳಲ್ಲಿ, ಅವರನ್ನು ಹೆಚ್ಚಾಗಿ ಸರ್ದಾರ್ ಎಂದು ಕರೆಯಲಾಗುತ್ತಿತ್ತು, ಇದರರ್ಥ ಹಿಂದಿ, ಉರ್ದು, ಮತ್ತು ಪರ್ಷಿಯನ್ ಭಾಷೆಗಳಲ್ಲಿ "ಮುಖ್ಯ"ವಾದ ವ್ಯಕ್ತಿ. 1947ರ ಇಂಡೋ-ಪಾಕಿಸ್ತಾನ ಯುದ್ಧದ ಅವಧಿಯಲ್ಲಿ ಅವರು ಭಾರತೀಯ ಸೈನ್ಯದ ಕಮಾಂಡರ್-ಇನ್-ಚೀಫ್ ಆಗಿ ಸಹ ಕಾರ್ಯ ನಿರ್ವಹಿಸಿದರು. ಇವರು ಕೈಗೊಂಡ ಕಠು ನಿರ್ಧಾರಗಳಿಂದ ಇವರಿಗೆ, ಉಕ್ಕಿನ ಮನುಷ್ಯ ಅಥವಾ ಲೋಹ ಪುರುಷ ಎಂಬ ಬಿರುದೂ ಪ್ರಜಾಮಾನಸದಲ್ಲಿ ದೊರೆತಿತ್ತು. ಗುಜರಾತ್‌ನ ಗ್ರಾಮಾಂತರ ಭಾಗದಲ್ಲಿ ಬೆಳೆದ ಪಟೇಲ್, ಯಶಸ್ವಿ ವಕೀಲರಾಗಿದ್ದರು. ಅವರು ತರುವಾಯ ಗುಜರಾತ್‌ನ ಖೇಡಾ, ಬೊರ್ಸಾದ್ ಮತ್ತು ಬರ್ಡೋಲಿಗಳಿಂದ ರೈತರನ್ನು ಬ್ರಿಟಿಷ್ ಆಳ್ವಿಕೆಯ ವಿರುದ್ಧ ಅಹಿಂಸಾತ್ಮಕ, ನಾಗರಿಕ ಅಸಹಕಾರ ಚಳುವಳಿಗಾಗಿ ಸಂಘಟಿಸಿದರು. ಈ ಮೂಲಕ ಗುಜರಾತ್‌ನ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾದರು. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ 49ನೇ ಅಧ್ಯಕ್ಷರಾಗಿ ನೇಮಕಗೊಂಡರು. ಕ್ವಿಟ್ ಇಂಡಿಯಾ ಚಳವಳಿಯನ್ನು ಉತ್ತೇಜಿಸುವುದರ ಜೊತೆಯಲ್ಲೇ, ಕಾಂಗ್ರೆಸ್ ಪಕ್ಷವನ್ನು 1934 ಮತ್ತು 1937ರ ಚುನಾವಣೆಗಳಲ್ಲಿ ಮುನ್ನಡೆಸಿದರು. ಭಾರತದ ಮೊದಲ ಗೃಹ ಸಚಿವ ಮತ್ತು ಉಪ ಪ್ರಧಾನ ಮಂತ್ರಿಯಾಗಿ, ಪಟೇಲ್ ಭಾರತ ವಿಭಜನೆಯಿಂದ ಉಂಟಾದ ಹಿಂಸಾಚಾರದ ಸಮಯದಲ್ಲಿ, ಪಂಜಾಬ್ ಮತ್ತು ದೆಹಲಿಯ ನಿರಾಶ್ರಿತರ ಪರಿಹಾರ ಕಾರ್ಯಗಳನ್ನು ಸಂಘಟಿಸಿ, ಆ ಭಾಗಗಳಲ್ಲಿ ಶಾಂತಿ ಪುನಃಸ್ಥಾಪಿಸಲು ಕೆಲಸ ಮಾಡಿದರು. ಅವರು ಭಾರತಕ್ಕೆ "ಹಂಚಿಕೆಯಾದ" ಬ್ರಿಟಿಷ್ ವಸಾಹತುಶಾಹಿ ಪ್ರಾಂತ್ಯಗಳನ್ನು ಹೊಸದಾಗಿ ಸ್ವಾತಂತ್ರ್ಯ ಹೊಂದಿದ ರಾಷ್ಟ್ರವಾಗಿ ಯಶಸ್ವಿಯಾಗಿ ಏಕೀಕರಿಸಿ ಸಂಯುಕ್ತ ಭಾರತವನ್ನು ರೂಪಿಸುವ ಕಾರ್ಯವನ್ನು ಮುನ್ನಡೆಸಿದರು. 1947ರ ಇಂಡಿಯನ್ ಇಂಡಿಪೆಂಡೆನ್ಸ್ ಆಕ್ಟ್ನ ಪ್ರಕಾರ ಬ್ರಿಟಿಷ್ ಆಳ್ವಿಕೆಯಿಂದ ಸುಮಾರು 565 ಸ್ವಯಂ ಆಡಳಿತದ ಸಂಸ್ಥಾನಗಳನ್ನು ಬಿಡುಗಡೆ ಮಾಡಲಾಯಿತು. ಸೇನಾಪಡೆಗಳ ಬೆದರಿಕೆಯನ್ನು ಉಪಯೋಗಿಸಿ ಬಹುತೇಕ ರಾಜಪ್ರಭುತ್ವದ ರಾಜ್ಯಗಳನ್ನು ಭಾರತಕ್ಕೆ ಸೇರಿಸಿದರು. ಹೊಸ ಸ್ವತಂತ್ರ ದೇಶದಲ್ಲಿ ರಾಷ್ಟ್ರೀಯ ಏಕೀಕರಣಕ್ಕೆ ಅವರ ಬದ್ಧತೆಯು ಸಂಪೂರ್ಣ ಮತ್ತು ತುಸುವೂ ರಾಜಿಯಾಗದ್ದಾಗಿತ್ತು. ಆಧುನಿಕ ಅಖಿಲ ಭಾರತ ಸೇವೆಗಳ ವ್ಯವಸ್ಥೆಯನ್ನು ಸ್ಥಾಪಿಸಿದ್ದಕ್ಕಾಗಿ ಅವರು "ಭಾರತದ ನಾಗರಿಕ ಸೇವಕರ ಪೋಷಕ ಸಂತ" (patron saint of India's civil servants) ಎಂದು ನೆನಪಿಸಿಕೊಳ್ಳುತ್ತಾರೆ. ಅವರನ್ನು "ಭಾರತದ ಏಕೀಕರಣ ನೇತಾರ" ಎಂದೂ ಕರೆಯಲಾಗುತ್ತದೆ. ಪ್ರಪಂಚದ ಅತಿ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆಯನ್ನು 31 ಅಕ್ಟೋಬರ್ 2018 ರಂದು ದೇಶಕ್ಕೆ ಸಮರ್ಪಿಸಲಾಯಿತು, ಅದು ಸುಮಾರು 182 ಮೀಟರ್ ಎತ್ತರದ್ದಾಗಿದೆ. ಆರಂಭಿಕ ಜೀವನ ವಲ್ಲಭಭಾಯ್ ಝವೇರಿಭಾಯ್ ಪಟೇಲ್ ಹುಟ್ಟಿದ್ದು ಗುಜರಾತಿನ ನಡಿಯಾಡ್ ಎಂಬಲ್ಲಿನ ಅವರ ಸೋದರಮಾವನ ಮನೆಯಲ್ಲಿ. ಖೇಡಾ ಜಿಲ್ಲೆಯ ಕರಮಸಾಡ್ ಎಂಬ ಹಳ್ಳಿಯ ನಿವಾಸಿ ಝವೇರಭಾಯ್ ಮತ್ತು ಲಾಡಬಾ ಇವರ ನಾಲ್ಕನೆಯ ಮಗನಾಗಿ ಜನಿಸಿದ ವಲ್ಲಭಭಾಯಿಯ ಹುಟ್ಟಿದ ದಿನ, ಮುಂದೆ ಅವರು ಮ್ಯಾಟ್ರಿಕ್ ಪರೀಕ್ಷೆಯಲ್ಲಿ ಅಕ್ಟೋಬರ್ ೩೧ ಎಂದು ನಮೂದಿಸಿದರೂ, ನಿಖರವಾಗಿ ದಾಖಲಾಗಿಲ್ಲ. ಅವರು ಮಧ್ಯ ಗುಜರಾತ್‍‌ನ ಲೇವಾ ಪಟೇಲ್ ಪಾಟಿದಾರ ಸಮುದಾಯಕ್ಕೆ ಸೇರಿದವರಾಗಿದ್ದಾರೆ, ಆದಾಗ್ಯೂ ಲೇವಾ ಪಟೇಲ್‌ ಮತ್ತು ಕಡವ ಪಟೇಲ್‌ರ ಗುಂಪುಗಳು ಸರ್ದಾರ್ ಪಟೇಲ್‌ರನ್ನು ತಮ್ಮವರೆಂದು ಗುರುತಿಸುತ್ತಾರೆ. ಸೋಮಾಭಾಯಿ, ನರಸೀಭಾಯಿ, ಮತ್ತು ,ರಾಜಕೀಯದಲ್ಲಿ ಮುಂದೆ ಪ್ರಸಿದ್ಧರಾದ, ವಿಠ್ಠಲಭಾಯಿ ಇವರ ಅಣ್ಣಂದಿರುಗಳು. ಕಾಶೀಭಾಯಿ ಎಂಬ ತಮ್ಮ ಹಾಗೂ ದಹೀಬಾ ಎಂಬ ತಂಗಿ ಇವರ ಇತರ ಒಡಹುಟ್ಟಿದವರು. ಪಟೇಲ್‌ರು ನಡಿಯಾದ್, ಪೆಟ್ಲಾಡ್, ಮತ್ತು ಬೋರಸಾಡ್‌ನಲ್ಲಿ ಶಾಲೆಗಳಿಗೆ ಹಾಜರಾಗಲು, ಇತರ ಹುಡುಗರೊಂದಿಗೆ ಪ್ರಯಾಣಿಸುತ್ತಾ ಸ್ವಯಂ ಜೀವಿಸುತ್ತಿದ್ದರು. ಅವರು ಅಚಲ ಸಂಯಮ ಸ್ವಭಾವವನ್ನು ಬೆಳೆಸಿಕೊಂಡರು. ಒಂದು ಜನಪ್ರಿಯ ದಂತಕಥೆಯಂತೆ, ಒಮ್ಮೆ ಕ್ಷೌರಿಕನು ಒಂದು ಗುಳ್ಳೆಯ ಕಾರಣ ಅಳುಕುತಿದ್ದಾಗ, ತಾವೇ ಚಾಕುವನ್ನು ತೆಗೆದುಕೊಂಡು, ಕೆತ್ತಿಕೊಂಡರು. ಪಟೇಲರು ೨೨ ವರ್ಷದವರಿದ್ದಾಗ, ಮ್ಯಾಟ್ರಿಕ್ ಪರೀಕ್ಷೆ ಕಟ್ಟಿದರು. ಈ ಘಟ್ಟದಲ್ಲಿ ಅವರ ಸರೀಕರ ಅಭಿಪ್ರಾಯದಲ್ಲಿ ಪಟೇಲರು ಯಾವುದೇ ಮಹತ್ವಾಕಾಂಕ್ಷೆಯಿಲ್ಲದ ಜನಸಾಮಾನ್ಯರಲ್ಲಿ ಒಬ್ಬರಾಗಿದ್ದರು. ಆದಾಗ್ಯೂ, ಪಟೇಲ್ ಸ್ವತಃ ವಕೀಲರಾಗಿ ಕೆಲಸ ಮಾಡಲು ಮತ್ತು ಹಣವನ್ನು ಉಳಿಸಲು, ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಲು ಮತ್ತು ನ್ಯಾಯವಾದಿಯಾಗಲು ಅಧ್ಯಯನ ಮಾಡಲು ಯೋಜನೆಯನ್ನು ರೂಪಿಸಿಕೊಂಡಿದ್ದರು. ಹಲವು ವರ್ಷಗಳ ಕಾಲ ತನ್ನ ಕುಟುಂಬದಿಂದ ದೂರವಿದ್ದು, ಇತರ ವಕೀಲರಿಂದ ಎರವಲು ಪಡೆದ ಪುಸ್ತಕಗಳೊಂದಿಗೆ ತನ್ನದೇ ಆದ ಅಧ್ಯಯನವನ್ನು ನಡೆಸಿ, ಎರಡು ವರ್ಷಗಳಲ್ಲಿ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದರು. ಆನಂತರ, ತನ್ನ ಪತ್ನಿಯಾದ ಜಾವೇರ್‌ಬಾರನ್ನು ತವರು ಮನೆಯಿಂದ ಕರೆಯಿಸಿ, ಗೋಧ್ರಾದಲ್ಲಿ ಮನೆ ಮಾಡಿದರು. ಈ ಜೋಡಿಗೆ, 1904 ರಲ್ಲಿ ಮಣಿಬೆನ್ (ಮಗಳು) ಮತ್ತು 1906 ರಲ್ಲಿ ದಹ್ಯಾಭಾಯಿ (ಮಗ) ಜನಿಸಿದರು. ಅಲ್ಲಿಯೇ ಅವರಿಗೆ ವಕೀಲಿ ವೃತ್ತಿಯ ಪರವಾನಿಗೆ ಸಹ ದೊರೆಯಿತು. ಹಣ ಉಳಿಸಲು ಹಲವು ವರ್ಷಗಳನ್ನು ತೆಗೆದುಕೊಂಡ ಪಟೇಲ್, ತೀವ್ರ ಮತ್ತು ನುರಿತ ವಕೀಲರಾಗಿ ಖ್ಯಾತಿಯನ್ನು ಗಳಿಸಿದರು. ಗುಜರಾತ್‌ನಾದ್ಯಂತ ಬಬೊನಿಕ್ ಪ್ಲೇಗ್ ಹರಡುತ್ತಿದ್ದಾಗ, ಸ್ನೇಹಿತರ ಆರೈಕೆ ಮಾಡಿದ್ದರು. ಪಟೇಲ್‌ರಿಗೇ ಈ ಮಾರಿ ಅಪ್ಪಳಿಸಿದಾಗ, ತನ್ನ ಕುಟುಂಬವನ್ನು ಸುರಕ್ಷತಾ ಜಾಗಕ್ಕೆ ಕಳುಹಿಸಿ, ತಾನೂ ಮನೆ ಬಿಟ್ಟು,ನಡಿಯಾದ್‌ನಲ್ಲಿ ಪ್ರತ್ಯೇಕವಾದ ಮನೆ ಮಾಡಿ ಉಳಿಯಲಾರಂಭಿಸಿದರು. (ಕೆಲವು ದಾಖಲೆಗಳ ಪ್ರಕಾರ, ಪಟೇಲ್ ಈ ಸಮಯವನ್ನು ಒಂದು ಶಿಥಿಲವಾದ ದೇವಾಲಯದಲ್ಲಿ ಕಳೆದರು); ಅಲ್ಲಿ ಅವರು ನಿಧಾನವಾಗಿ ಚೇತರಿಸಿಕೊಂಡರು. ಅದಕ್ಕಾಗಿ ಹಣ ಒಟ್ಟುಮಾಡಿ, ಮುಂದೆ ಬ್ಯಾರಿಸ್ಟರಾಗಲು ಇಂಗ್ಲೆಂಡಿಗೆ ತೆರಳುತ್ತಾರೆ. ಪಟೇಲರು ಹಣಸಂಗ್ರಹಣೆಯಲ್ಲಿ ತೊಡಗಿದ್ದ ಕಾಲದಲ್ಲಿ ಅವರ ಅಣ್ಣ ವಿಠ್ಠಲಭಾಯಿ ವಕೀಲರಾಗಿ ಹೆಸರಾಗುತ್ತಿದ್ದರು. ತಮ್ಮ ವಾಸಸ್ಥಾನವಾದ ಕರಮ್‌ಸಾದ್‌ನಲ್ಲಿನ ಹಣಕಾಸಿನ ತಾಪತ್ರಯಗಳನ್ನು ಅನುಭವಿಸುತ್ತ, ಗೋದಾ್ರಾ, ಬೋರಸದ್, ಮತ್ತು ಆನಂದ್‌ಗಳಲ್ಲಿ ತಮ್ಮ ವಕೀಲಿ ವೃತ್ತಿಯನ್ನು ಮುಂದುವರೆಸಿದ್ದರು. ಬೋರಸದ್‌ನ "ಎಡ್ವರ್ಡ್ ಮೆಮೋರಿಯಲ್ ಹೈಸ್ಕೂಲ್(ಇಂದಿನ ಜಾವೆರ್ಭಾಯಿ ದಜಿಭಾಯಿ ಪಟೇಲ್ ಹೈಸ್ಕೂಲ್)"ನ ಮೊದಲ ಅಧ್ಯಕ್ಷ ಮತ್ತು ಸಂಸ್ಥಾಪಕರಾಗಿದ್ದರು. ಇಂಗ್ಲೆಂಡ್‌ಗೆ ತೆರಳಲು ಅವರು ಸಾಕಷ್ಟು ಹಣ ಉಳಿಸಿ, ಪಾಸ್ ಮತ್ತು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದಾಗ, "ವಿ.ಜೆ.ಪಟೇಲ್" ಎಂದು ನಮೂದಿಸಲಾಗಿತ್ತು. ಇವರದೇ ಹೆಸರಿನ ಮೊದಲಕ್ಷರ ಹೊಂದಿದ್ದ ಇವರ ಅಣ್ಣನಾದ ವಿಠಲ್‌ಭಾಯ್ ವಿಳಾಸವು ಸಹ ನಮೂದಾಗಿತ್ತು. ಇಂಗ್ಲೆಂಡ್ನಲ್ಲಿ ಅಧ್ಯಯನ ಮಾಡುವ ಆಶಯವನ್ನು ಹೊಂದಿದ್ದ ವಿಠಲ್‌ಭಾಯ್, ವಲ್ಲಭ್‌ಭಾಯಿ ಮೊದಲು ಹೋದರೆ, ಅಣ್ಣನಾದ ತಾನು ಅವನ ಹಿಂದೆ ಹೋಗಬೇಕಾಗಿ ಬರುತ್ತದೆ ಮತ್ತು ಅದು ತನ್ನ ಗೌರವಕ್ಕೆ ಕುಂದು ತರುವಿದೆಂದು ಅಭಿಪ್ರಾಯಪಟ್ಟರು. ಅವರ ಕುಟುಂಬದ ಗೌರವಾರ್ಥ, ಪಟೇಲ್ ವಿಠಲ್‌ಭಾಯ್ ಅವರನ್ನು ತಮ್ಮ ಜಾಗದಲ್ಲಿ, ತಮ್ಮ ಟಿಕೆಟ್‌ ಉಪಯೋಗಿಸಿಕೊಂಡು ಹೋಗಲು ಅನುಮತಿ ನೀಡಿದರು. 1909 ರಲ್ಲಿ ಪಟೇಲ್ ಅವರ ಹೆಂಡತಿ ಜಾವೇರ್‌ಬಾ ಬಾಂಬೆ (ಈಗನ ಮುಂಬೈ) ನಲ್ಲಿ, ಕ್ಯಾನ್ಸರ್‌ಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ, ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯ ಆರೋಗ್ಯವು ಹಠಾತ್ತಾಗಿ ಹದಗೆಟ್ಟಿತು ಮತ್ತು ಯಶಸ್ವಿ ತುರ್ತು ಶಸ್ತ್ರಚಿಕಿತ್ಸೆಯ ಹೊರತಾಗಿಯೂ ಅವರು ಆಸ್ಪತ್ರೆಯಲ್ಲಿ ನಿಧನರಾದರು. ನ್ಯಾಯಾಲಯದಲ್ಲಿ ಸಾಕ್ಷಿಯನ್ನು ಅಡ್ಡ-ಪರೀಕ್ಷೆ ಮಾಡುತ್ತಿದ್ದ ಪಟೇಲ್ ಅವರಿಗೆ ಪತ್ನಿಯ ಮರಣದ ಬಗ್ಗೆ ತಿಳಿಸುವ ಒಂದು ಟಿಪ್ಪಣಿಯನ್ನು ನೀಡಲಾಯಿತು. ಸಾಕ್ಷಿಗಳ ಪ್ರಕಾರ, ಪಟೇಲ್ ಈ ಟಿಪ್ಪಣಿಯನ್ನು ಓದಿದರು, ಅದನ್ನು ಕಿಸೆಯಲ್ಲಿಟ್ಟರು ಮತ್ತು ಅವರ ಅಡ್ಡ-ಪರೀಕ್ಷೆಯನ್ನು ಮುಂದುವರೆಸಿದರಲ್ಲದೇ ಪ್ರಕರಣವನ್ನು ಗೆದ್ದರು. ವಿಚಾರಣೆ ಕೊನೆಗೊಂಡ ನಂತರ ಅವರು ಸುದ್ದಿಯನ್ನು ಹೊರಹಾಕಿದರು. ಮತ್ತೆ ಮದುವೆಯಾಗದಿರಲು ಪಟೇಲ್ ನಿರ್ಧರಿಸಿದ್ದರು. ತನ್ನ ಕುಟುಂಬದ ಸಹಾಯದಿಂದ ಅವರು ತಮ್ಮ ಮಕ್ಕಳನ್ನು ಬೆಳೆಸಿದರು ಮತ್ತು ಅವರನ್ನು ಮುಂಬೈಯ ಇಂಗ್ಲಿಷ್-ಭಾಷಾ ಶಾಲೆಗಳಿಗೆ ಕಳುಹಿಸಿದರು. 36 ನೇ ವಯಸ್ಸಿನಲ್ಲಿ ಅವರು ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದರು ಮತ್ತು ಲಂಡನ್‌ನ "ಮಿಡಲ್ ಟೆಂಪಲ್ ಇನ್" ನಲ್ಲಿ ಸೇರಿಕೊಂಡರು. ಕೇವಲ 30 ತಿಂಗಳುಗಳಲ್ಲಿ, 36 ತಿಂಗಳ ಕೋರ್ಸ್ ಪೂರ್ಣಗೊಂಡಾಗ, ಯಾವುದೇ ಕಾಲೇಜು ಹಿನ್ನಲೆಯಿಲ್ಲದ ಪಟೇಲ್, ತಮ್ಮ ತರಗತಿಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ಪಾಸಗಿದ್ದರು. ಭಾರತಕ್ಕೆ ಹಿಂದಿರುಗಿದ ಪಟೇಲ್ ಅಹಮದಾಬಾದ್‌ನಲ್ಲಿ ನೆಲೆಸಿದರು ಮತ್ತು ನಗರದ ಅತ್ಯಂತ ಯಶಸ್ವಿ ನ್ಯಾಯವಾದಿಗಳ ಪೈಕಿ ಒಬ್ಬರಾದರು. ಯುರೋಪಿಯನ್-ಶೈಲಿಯ ಬಟ್ಟೆಗಳನ್ನು ಧರಿಸುವುದು ಮತ್ತು ಶಿಷ್ಟ (ನಗರೀಕರಣದ) ವರ್ತನೆಗಳನ್ನು ತೋರ್ಪಡಿಸುತ್ತ , ಅವರು ನುರಿತ ಬ್ರಿಡ್ಜ್ ಆಟಗಾರರಾದರು. ಪಟೇಲ್ ತಮ್ಮ ವೃತ್ತಿಯಿಂದ, ಬಹಳಷ್ಟು ಹಣಗಳಿಸಿ, ತಮ್ಮ ಮಕ್ಕಳಿಗೆ ಅಧುನಿಕ ಶಿಕ್ಷಣವನ್ನು ಒದಗಿಸುವ ಉದ್ದೇಶವನ್ನು ಹೊಂದಿದ್ದರು. ಬೊಂಬೆ ಪ್ರೆಸಿಡೆನ್ಸಿಯಿಂದ ರಾಜಕೀಯಕ್ಕೆ ಸೇರಲು ಸಿದ್ಧರಾಗಿದ್ದ ಅಣ್ಣ ವಿಠಲ್‌ಭಾಯ್‌ರವರೊಂದಿಗಿನ ಒಪ್ಪಂದದಂತೆ, ಅಹಮದಾಬಾದ್‌ನಲ್ಲಿಯೇ ಮನೆ ಜವಾಬ್ದಾರಿಯನ್ನು ವಹಿಸಿಕೊಂಡರು. ಜೀವನ ನಂತರ ಪಟೇಲರು, ಹೆ೦ಡತಿ ಝವೇರಬಾರೊಂದಿಗೆ, ಅವರಿಗೆ ಚಿಕ್ಕವಯಸ್ಸಿನಲ್ಲಿಯೇ ಮದುವೆಯಾಗಿತ್ತು, ಸಂಸಾರ ಹೂಡಿದರು. ಅವರಿಗೆ ಇಬ್ಬರು ಮಕ್ಕಳಾದರು. ೧೯೦೪ರಲ್ಲಿ ಮಣಿ ಎಂಬ ಮಗಳು ಮತ್ತು ೧೯೦೬ರಲ್ಲಿ ದಹ್ಯಾ ಎಂಬ ಮಗ. ಬ್ಯುಬೋನಿಕ್ ಪ್ಲೇಗಿನಿಂದ ನರಳುತ್ತಿದ್ದ ಗೆಳೆಯನೊಬ್ಬನ ಆರೈಕೆ ಮಾಡುತ್ತ, ಪಟೇಲರು ಸ್ವತಃ ಆ ರೋಗಕ್ಕೆ ತುತ್ತಾದಾಗ, ತಮ್ಮ ಕುಟುಂಬವನ್ನು ಸುರಕ್ಷಿತ ಜಾಗಕ್ಕೆ ಕಳುಹಿಸಿ, ತಮ್ಮ ಮನೆಯನ್ನು ತ್ಯಜಿಸಿ, ನಡಿಯಾದಿನ ಮನೆಯೊಂದರಲ್ಲಿ ( ಪಾಳುಬಿದ್ದ ದೇವಸ್ಥಾನ ಎಂದೂ ಕೆಲವರು ಹೇಳುತ್ತಾರೆ) ಚೇತರಿಕೊಳ್ಳುವವರೆಗೆ ನೆಲೆಸಿದರು. ೧೯೦೯ರಲ್ಲಿ ಅವರ ಪತ್ನಿ ತೀರಿಕೊಂಡರು. ಪಟೇಲರ ಅಂತರ್ಮುಖಿ ಸ್ವಭಾವದಿಂದ ಅವರ ಹೆಂಡತಿಯ ಬಗ್ಯೆ ಸಾರ್ವಜನಿಕರಿಗೆ ತಿಳಿದಿರುವುದು ಅತ್ಯಲ್ಪ. ಪಟೇಲರು ಮರುಮದುವೆ ಮಾಡಿಕೊಳ್ಳಲಿಲ್ಲ. ತಮ್ಮ ಕುಟುಂಬದ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಲೇ , ಪಟೇಲರು ಇಂಗ್ಲೆಂಡ್ ಪ್ರಯಾಣಕ್ಕೆ ಹಣ ಶೇಖರಿಸತೊಡಗಿದರು. ಮುಂದೆ ಇಂಗ್ಲೆಂಡ್ ಪ್ರಯಾಣದ ಅವಕಾಶ ಸಿಕ್ಕಿದಾಗ ಆ ಅವಕಾಶವನ್ನು ತಮ್ಮ ಅಣ್ಣ, ವಿಠ್ಠಲಭಾಯಿ ,ಗೆ ಬಿಟ್ಟುಕೊಟ್ಟದ್ದಷ್ಟೇ ಅಲ್ಲ, ಅದಕ್ಕೆ ತಾವು ಕೂಡಿಟ್ಟಿದ್ದ ಹಣವನ್ನೂ ನೀಡಿದರು. ಅದು ಆದದ್ದು ಹೀಗೆ: ಪರದೇಶ ಪ್ರಯಾಣದ ತಿಕೀಟುಗಳು ಮತ್ತು ಪಾಸು “ವಿ.ಜೆ.ಪಟೇಲ್” ( ಅಣ್ಣ , ತಮ್ಮ ಇಬ್ಬರ ಇನಿಷಿಯಲ್ಲುಗಳು ವಿ.ಜೆ. ಎಂದೇ ಇತ್ತು) ಎಂಬ ಹೆಸರಿಗೆ ಅವರ ಅಣ್ಣನ ಮನೆಯ ವಿಳಾಸಕ್ಕೆ ತಲುಪಿತು. ಅಣ್ಣನಿಗೆ ತಮ್ಮ ಸ್ಥಾನವನ್ನು ಬಿಟ್ಟುಕೊಡಲು ಹಿಂದೆಗೆಯದ ವಲ್ಲಭಭಾಯ್ ಅಣ್ಣನ ಪ್ರವಾಸದ ಖರ್ಚನ್ನೂ ನಿಭಾಯಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗ ೧೯೧೮ರಲ್ಲಿ ತಮ್ಮ ಚೆನ್ನಾಗಿ ನಡೆಯುತ್ತಿದ್ದ ವಕೀಲಿ ವೃತ್ತಿ, ಅದರ ಘನತೆ,ಗೌರವ, ದೊಡ್ಡ ಮನೆ,ಸಂಪತ್ತು ಎಲ್ಲವನ್ನೂ ತ್ಯಜಿಸಿ ಸ್ವಾತಂತ್ರ್ಯ ಹೋರಾಟದ ಸರಳ ಜೀವನ, ಕಷ್ಟಕಾರ್ಪಣ್ಯ ಗಳಿಗೆ ತಮ್ಮನ್ನು ಅರ್ಪಿಸಿಕೊಂಡರು. ಮೊದಮೊದಲು ತಮ್ಮ ಮಿತ್ರರೊಂದಿಗೆ ಗಾಂಧಿಯವರ ರೀತಿನೀತಿಗಳನ್ನೂ, ರಾಜಕೀಯ ನೀತಿಗಳನ್ನೂ ಲೇವಡಿ ಮಾಡಿದ್ದರೂ, ಅನ್ನಿ ಬೆಸಂಟರ ಬಂಧನಕ್ಕೆ ಸಹಿಹಾಕಿದ ಪಿಟಿಷನ್ ಬದಲು ಸಾರ್ವಜನಿಕ ಪ್ರತಿಭಟನೆಮಾಡಬೇಕು ಎಂದು ಗಾಂಧಿ ಸೂಚಿಸಿದಾಗ, ಅವರ ಮನಃಪರಿವರ್ತನೆಯಾಯಿತು. ಗಾಂಧಿಯವರ ಚಂಪಾರಣ್ಯದ ಸತ್ಯಾಗ್ರಹದ ನಂತರ ಪಟೇಲರಿಗೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಜಯ ಗಳಿಸಲು ಗಾಂಧಿ ಸಮರ್ಥರು ಎಂದು ನಂಬಿಕೆಯುಂಟಾಯಿತು. ಆ ಹಿರಿಯ ವ್ಯಕ್ತಿ ಭಾರತೀಯ ಮೌಲ್ಯಗಳಲ್ಲಿಟ್ಟಿದ್ದ ಶ್ರದ್ಧೆ, ಅತಿ ಸರಳ ಜೀವನ ಇವುಗಳಿಂದ ಆಕರ್ಷಿತರಾದ ಪಟೇಲರು ಗಾಂಧಿಯವರ ಆಪ್ತರಾದರು. ಪಟೇಲರು ಕಾಂಗ್ರೆಸ್ ಪಕ್ಷ ಸೇರಿದ್ದು ೧೯೧೮ರ ನಂತರ. ಅವರು ಕಾರ್ಯದರ್ಶಿಯಾಗಿದ್ದ ಗುಜರಾತ್ ಸಭಾ ೧೯೨೦ ರಲ್ಲಿ ಗುಜರಾತ್ ಪ್ರದೇಶ ಕಾಂಗ್ರೆಸ್ ಕಮಿಟಿಯಾಗಿ ಬದಲಾಯಿತು. ಅದರ ಅಧ್ಯಕ್ಷರಾಗಿ ನೇಮಕಗೊಂಡ ಅವರು ೧೯೪೭ರವರೆಗೂ ಅಲ್ಲಿ ಸೇವೆ ಸಲ್ಲಿಸಿದರು. ಖೇಡಾ, ಬರ್ಸಾಡ್ ಮತ್ತು ಬಾರ್ಡೋಲಿ ಸತ್ಯಾಗ್ರಹಗಳು ಖೇಡಾ ಹೋರಾಟದೊಂದಿಗೆ ಪಟೇಲರು ಸ್ವಾತಂತ್ರ್ಯ ಹೋರಾಟಕ್ಕೆ ಕಾಲಿಟ್ಟರು. ಗುಜರಾತಿನ ಖೇಡಾ ವಿಭಾಗವು ತೀವ್ರ ಕ್ಷಾಮದಿಂದ ತತ್ತರಿಸುತ್ತಿದ್ದು, ಅಲ್ಲಿಯ ರೈತರು ಕರ ವಿನಾಯಿತಿಗೆ ಬೇಡಿಕೆಯಿಟ್ಟರು. ಗಾಂಧಿ ಈ ಹೋರಾಟಕ್ಕೆ ಒಪ್ಪಿದ್ದರೂ ಸ್ವತಃ ಚಂಪಾರಣ್ಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರ ಕಾರಣ, ಈ ಹೋರಾಟದ ಮುಖಂಡತ್ವವನ್ನು ವಹಿಸಲು ಅಸಾಧ್ಯವಾಗಿತ್ತು. ಖೇಡಾ ವಿಷಯಕ್ಕಾಗಿ ಪೂರ್ಣಾವಧಿ ಸಮಯವನ್ನು ಮೀಸಲಿಡುವ ಸ್ವಯಂಸೇವಕನಿಗಾಗಿ ಗಾಂಧಿ ಕೇಳಿದಾಗ ಪಟೇಲರು ಕೈಯೆತ್ತಿ , ಎದ್ದು ನಿಂತರು. ಹಿಂದೆ ವಕೀಲರೂ, ಗಾಂಧಿಯವರ ಅನುಯಾಯಿಗಳೂ ಆಗಿದ್ದ ನರಹರಿ ಪಾರೀಖ್ ಮತ್ತು ಮೋಹನಲಾಲ್ ಪಂಡ್ಯರೊಂದಿಗೆ ಪಟೇಲರು ಹಳ್ಳಿಹಳ್ಳಿ ಪ್ರವಾಸ ಕೈಗೊಂಡು, ಗ್ರಾಮಸ್ಥರ ತೊಂದರೆಗಳನ್ನು ಪರಿಶೀಲಿಸಿ, ರಾಜ್ಯವ್ಯಾಪಿ ಆಂದೋಳನದಲ್ಲಿ ಅವರೆಲ್ಲರ ಬೆಂಬಲವನ್ನು ಬೇಡಿದರು. ರಾಜ್ಯದ ಎಲ್ಲೆಡೆಗಳಲ್ಲಿ ಹಿಂದೂ, ಮುಸ್ಲಿಂ ಎನ್ನದೆ, ಬಹುತೇಕ ಪ್ರತಿಯೊಬ್ಬರೂ ಪಟೇಲರ ಪರಿಶ್ರಮ ಮತ್ತು ನಾಯಕತ್ವವನ್ನು ಒಪ್ಪಿಕೊಂಡರು. ಪಟೇಲರು ಈ ಹೋರಾಟವು ಸಂಪೂರ್ಣ ಅಹಿಂಸಾತ್ಮಕವಾಗಿದ್ದು, ಹಳ್ಳಿಗರು ಒಗ್ಗಟ್ಟನ್ನು ಮುರಿಯಬಾರದೆಂದು ಸಾರಿಹೇಳಿದರು. ಪಟೇಲರ ಈ ಕಾರ್ಯದಲ್ಲಿ ರಾಷ್ಟ್ರೀಯವಾದಿಗಳಾದ ಅಬ್ಬಾಸ್ ತ್ಯಾಬ್ಜೀ ಮತ್ತು ಅಹಮದಾಬಾದಿನ ಸಾರಾಭಾಯ್ ಕೈಗೂಡಿಸಿದರು. ಹಳ್ಳಿಗರ ಕರನಿರಾಕರಣೆಯ ಸತ್ಯಾಗ್ರಹವನ್ನು ಮುರಿಯಲು ಸರಕಾರ ಪೋಲಿಸ್ ಪಡೆಗಳನ್ನು ಕಳುಹಿಸಿ, ಜಮೀನು, ಸಾಕುಪ್ರಾಣಿಗಳನ್ನೊಳಗೊಂಡು, ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಪ್ರಾರಂಭಿಸಿತು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಗ್ರಾಮಸ್ಥರು, ಬಂಧಿತರಾದರೂ ಹಳ್ಳಿಗರ ಕಡೆಯಿಂದ ಹಿಂಸಾತ್ಮಕ ಪ್ರತಿಕ್ರಿಯೆ ಇಲ್ಲವೇಇಲ್ಲವೆನ್ನುವಷ್ಟು ಅಪರೂಪವಾಗಿತ್ತು. ಸತ್ಯಾಗ್ರಹಿಗಳಿಗೆ ರಾಜ್ಯಾದ್ಯಂತ ಜನಸಾಮಾನ್ಯರು, ಆಹಾರ, ಬಟ್ಟೆ ಮತ್ತು ಇತರ ಅವಶ್ಯಕತೆಗಳನ್ನು ಪೂರೈಸಿ, ಬೆಂಬಲ ಸೂಚಿಸಿದರು.ತೆರಿಗೆ ಸಲ್ಲಿಸಿದ ,ಸರಕಾರಕ್ಕೆ ಬೆಂಬಲವಿತ್ತ ಹಳ್ಳಿಗಳಿಗೆ ಗುಜರಾತಿನ ಜನ ಬಹಿಷ್ಕಾರ ಹಾಕಿದರು. ಈ ಪ್ರತಿಭಟನೆಗೆ ಭಾರತದಾದ್ಯಂತ ಸಹಾನುಭೂತಿ ವ್ಯಕ್ತವಾದರೂ, ಈ ಪ್ರತಿಭಟನೆ ಸ್ಥಳೀಯ ಸಮಸ್ಯೆಗಾಗಿತ್ತೇ ಹೊರತು, ಭಾರತದ ಸ್ವಾತಂತ್ರ್ಯಕ್ಕಾಗಿ ಆಗಿರಲಿಲ್ಲ ಎಂಬುದನ್ನು ಗಮನಿಸಬೇಕು. ೧೯೧೯ರಲ್ಲಿ ಸರಕಾರ ಮಣಿದು, ಕರವನ್ನು ಮುಂದೂಡಿದ್ದಷ್ಟೇ ಅಲ್ಲ, ಅದರ ದರವನ್ನೂ ಕಡಿಮೆ ಮಾಡುವುದರೊಂದಿಗೆ ಈ ಹೋರಾಟ ಮುಕ್ತಾಯ ಕಂಡಿತು. ಸಾಮಾಜಿಕ ಹೋರಾಟಗಳು ಪಟೇಲರು ಈ ಸತ್ಯಾಗ್ರಹದಿಂದ ಮಹಾನಾಯಕ ಎಂದು ಗುಜರಾತಿ ಜನಮನ್ನಣೆಯನ್ನು ಪಡೆದು, ಭಾರತದಾದ್ಯಂತ ರಾಜಕೀಯ ಧುರೀಣರ ಮೆಚ್ಚುಗೆಯನ್ನು ಗಳಿಸಿದರು.೧೯೧೯ ರಿಂದ ೧೯೨೮ರವರೆಗೆ, ಪಟೇಲರು, ಅಸ್ಪ್ರಶ್ಯತೆ, ಮದ್ಯಪಾನ, ಬಡತನ ಹಾಗೂ ಅಜ್ಙಾನದ ವಿರುದ್ಧ ವ್ಯಾಪಕ ಚಳುವಳಿ ನಡೆಸಿದರು. ೧೯೨೨ರಲ್ಲಿ ಅಹಮದಾಬಾದಿನ ಮುನಿಸಿಪಾಲಿಟಿಯ ಅಧ್ಯಕ್ಷರಾಗಿ ಚುನಾಯಿತರಾದರು. ಇದರಿಂದ ಪಟೇಲರಿಗೆ ಸಾರ್ವಜನಿಕ ಸೇವೆಯೊಂದಿಗೆ ರಾಜನೀತಿ ಮತ್ತು ಆಡಳಿತರಂಗಗಳಲ್ಲಿ ಹೆಚ್ಚಿನ ಅನುಭವ ಪಡೆದುಕೊಳ್ಳುವ ಅವಕಾಶ ದೊರಕಿತು. ಇವರ ಆಡಳಿತಾವಧಿಯಲ್ಲಿ ಅಹಮದಾಬಾದಿಗೆ ವಿದ್ಯುತ್ ಸರಬರಾಜು, ಚರಂಡಿ ಹಾಗೂ ನೈರ್ಮಲ್ಯ ವ್ಯವಸ್ಥೆ, ಹಾಗೂ ಶಿಕ್ಷಣ ವ್ಯವಸ್ಥೆಗಳಲ್ಲಿ ಭಾರೀ ಸುಧಾರಣೆಗಳನ್ನು ತಂದರು. ಹಿಂದೂ-ಮುಸ್ಲಿಮ್ ವಿವಾದದಂತಹ ನಾಜೂಕು ವಿಷಯಗಳನ್ನೂ ಕೈಗೆತ್ತಿಕೊಂಡು, ನಗರದ ಬಹುತೇಕ ಜನಸಂಖ್ಯೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರಗಳನ್ನು ಕೈಗೊಂಡರು. ೧೯೨೮ರಲ್ಲಿ ಬಾರ್ಡೋಲಿಯು ದುರವಸ್ಥೆಗೀಡಾಯಿತು. ಗುಜರಾತಿನ ಬಹುತೇಕ ಭಾಗಗಳು ಕ್ಷಾಮದಿಂದ ತತ್ತರಿಸುವುದರೊಂದಿಗೇ, ಸರಕಾರ ಕಂದಾಯವನ್ನು ಹೆಚ್ಚು ಮಾಡಿತು. ಇದರ ವಿರುದ್ಧವಾಗಿ ಪಟೇಲರು ಜನಸಮೂಹವನ್ನು ಒಟ್ಟುಗೂಡಿಸಿ ನಡೆಸಿದ ಪ್ರತಿಭಟನೆ ದೇಶದಲ್ಲೆಲ್ಲ ಹೆಸರುಮಾಡಿತು. ಖೇಡಾ ಸತ್ಯಾಗ್ರಹಕ್ಕಿಂತ ಉಗ್ರವಾಗಿದ್ದ ಈ ಪ್ರತಿಭಟನೆಗೆ ಬೆಂಬಲವಾಗಿ ಗುಜರಾತಿನ ಅನೇಕ ಕಡೆಗಳಲ್ಲಿ ಜನರು ಸತ್ಯಾಗ್ರಹ ಹೂಡಿದರು. ಈ ಎರಡೂ ಹೋರಾಟಗಳು ಮುಗಿದ ನಂತರ ಪಟೇಲರು, ಜನಸಾಮಾನ್ಯರು ಕಳೆದುಕೊಂಡಿದ್ದ ಭೂಮಿಕಾಣಿ ಹಾಗೂ ಆಸ್ತಿಪಾಸ್ತಿಗಳನ್ನು ಮತ್ತೆ ಅವರಿಗೆ ವಾಪಸು ದೊರಕಿಸಿಕೊಡಲು ಬಹಳಷ್ಟು ಪರಿಶ್ರಮಪಟ್ಟರು. ಬಾರ್ಡೋಲಿಯ ಸತ್ಯಾಗ್ರಹದಿಂದ ಪಟೇಲರಿಗೆ ಸರದಾರ್ ಎಂಬ ಬಿರುದು ಪ್ರಾಪ್ತವಾಯಿತು. ಗುಜರಾತಿನ ಲಕ್ಷಾಂತರ ಜನರಿಗೆ ಪಟೇಲರು ಆರಾಧ್ಯದೈವವಾದರು. ಭಾರತದ ವಿಭಜನೆ ಜಿನ್ನಾರ ನಾಯಕತ್ವದಲ್ಲಿ ದಿನೇದಿನೇ ಹೆಚ್ಚುತ್ತಿದ್ದ ಮುಸ್ಲಿಮ್ ಪ್ರತ್ಯೇಕತಾ ಬೇಡಿಕೆಯಿಂದ ಭಾರತದ ವಿಭಜನೆ ಅನಿವಾರ್ಯ ಎಂಬ ನಿರ್ಣಯಕ್ಕೆ ಬಂದ ಮೊದಮೊದಲ ಕಾಂಗ್ರೆಸ್ ನಾಯಕರುಗಳಲ್ಲಿ ಪಟೇಲರು ಒಬ್ಬರಾಗಿದ್ದರು. ಕಾಂಗ್ರೆಸ್ ಮತ್ತು ಮುಸ್ಲಿಮ್ ಲೀಗ್ ಮಧ್ಯೆ ಸಂಧಾನದ ಪ್ರಯತ್ನಗಳನ್ನು ವಿಫಲಗೊಳಿಸಿ, ಜಿನ್ನಾ ತನ್ನ ಹಿಂಬಾಲಕರನ್ನು ಹಿಂಸಾತ್ಮಕ ಪ್ರತಿಭಟನೆಗೆ ಪ್ರಚೋದಿಸುತ್ತಿದ್ದದ್ದು ಪಟೇಲರನ್ನು ತೀವ್ರ ಸಂತಾಪಕ್ಕೆ ಈಡುಮಾಡಿತು.( ಜಿನ್ನಾ ಕರೆ ಕೊಟ್ಟ ಡೈರೆಕ್ಟ್ ಆಕ್ಷನ್ ಡೇ ಎಂಬ ಅಂದೋಳನದಲ್ಲಿ ೫೦೦೦ಕ್ಕೂ (?) ಹೆಚ್ಚು ಮಂದಿ ಕೊಲೆಗೀಡಾದರು.:- the death toll is estimated at between 500,000 to 1 million people: ಇಂಗ್ಲಿಷ್ ತಾಣ ನೋಡಿ). ಆದರೂ ಜಿನ್ನಾ ಮುಸ್ಲಿಮರ ಜನಪ್ರಿಯ ನಾಯಕನಾಗಿರುವುದರಿಂದ, ರಾಷ್ಟ್ರೀಯವಾದಿಗಳೊಂದಿಗಿನ ಅವರ ಭಿನ್ನಾಭಿಪ್ರಾಯಗಳು, ಬೃಹತ್ ಹಿಂದೂ ಮುಸ್ಲಿಮ್ ದಂಗೆಯ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳ ಅರಿವೂ ಅವರಿಗಿತ್ತು. ನೆಹರು ಮತ್ತಿತರರು ವಿಭಜನೆಯ ಸಾಧ್ಯತೆಯನ್ನು ಒಪ್ಪಿದ ಮೇಲೆ , ಈ ವಿಷಯದಲ್ಲಿ ಅತ್ಯಂತ ದುಃಖಿಗಳಾಗಿದ್ದ ಗಾಂಧಿಯನ್ನು ವಿಭಜನೆಯ ಅನಿವಾರ್ಯತೆಯ ಬಗ್ಯೆ ಒಪ್ಪಿಸುವ ಕಾರ್ಯವನ್ನು ಪಟೇಲರು ವಹಿಸಿಕೊಂಡರು. ವಿಭಜನೆಯ ನಂತರದ ಭಾರತ ಪಾರ್ಟಿಷನ್ ಕೌನ್ಸಿಲ್ಲಿನ, ಭಾರತದ ಪರವಾದ ಸದಸ್ಯರಾಗಿ ಪಟೇಲರು ಸರಕಾರಿ ಆಡಳಿತ ಯಂತ್ರಗಳ, ಆಸ್ತಿಪಾಸ್ತಿಗಳ ಸೂಕ್ತಹಂಚಿಕೆಯ ಮೇಲುಸ್ತುವಾರಿ ಮಾಡಿದರು ಭಾರತಕ್ಕಿಂತ ಗಾತ್ರದಲ್ಲೂ, ಜನಸಂಖ್ಯೆಯಲ್ಲೂ ಚಿಕ್ಕದಾಗಿದ್ದ ಪಾಕಿಸ್ತಾನಕ್ಕೆ, ಅದರ ಗಾತ್ರಕ್ಕನುಗುಣವಾಗಿ ಸಿಗಬೇಕಾಗಿದ್ದ ಸಂಪನ್ಮೂಲಗಳ ಭಾಗಕ್ಕಿಂತ ಹೆಚ್ಚಾಗಿ ಜಿನ್ನಾ ಪಡೆದುಕೊಳ್ಳದಂತೆ ಪಟೇಲರು ಎಚ್ಚರ ವಹಿಸಿದರು. ನೆಹರೂ ಮತ್ತು ಪಟೇಲರು ಜಂಟಿಯಾಗಿ ಕೇಂದ್ರ ಮಂತ್ರಿಮಂಡಲವನ್ನು ನಿರ್ಣಯಿಸಿ, ಪಟೇಲರು ಉಪಪ್ರಧಾನಿಯಾಗಿ ಗೃಹಖಾತೆಯನ್ನು ವಹಿಸಿಕೊಂಡರು. ತಮ್ಮ ಎಪ್ಪತ್ತೆರಡನೆಯ ವಯಸ್ಸಿನಲ್ಲಿ , ೫೬೫ ರಾಜ ಸಂಸ್ಥಾನಗಳನ್ನು ಭಾರತದಲ್ಲಿ ವಿಲೀನಗೊಳಿಸಿ, ಅಲ್ಲಿ ಪ್ರಜಾಪ್ರಭುತ್ವವನ್ನು ಜಾರಿಗೊಳಿಸುವ, ದೇಶದ ರಕ್ಷಣೆಯ ವ್ಯವಸ್ಥೆಯನ್ನು ರೂಪಿಸುವ, ಹಾಗೂ ಭಾರತವನ್ನು ಒಗ್ಗಟ್ಟಾದ ದೇಶವನ್ನಾಗಿ ಕಟ್ಟುವ ಮಹತ್ತರ ಜವಾಬ್ದಾರಿಯನ್ನು ಪಟೇಲರು ಹೊತ್ತುಕೊಂಡರು. ಅಷ್ಟೇ ಅಲ್ಲ, ಅಧಿಕಾರದ ವಿಕೇಂದ್ರೀಕರಣ, ಧಾರ್ಮಿಕ ಸಮಾನತೆ ಮತ್ತು ಸ್ವಾತಂತ್ರ್ಯ , ಆಸ್ತಿ ಹಕ್ಕು ಇತ್ಯಾದಿ ವಿಷಯಗಳನ್ನು ವಿಷದೀಕರಿಸಿ, ಭಾರತದ ಸಂವಿಧಾನದ ರಚನೆಯಲ್ಲಿ ಮಹತ್ವದ ಕೊಡುಗೆ ನೀಡಿದರು. ರಾಜ-ಮಹಾರಾಜ-ಸಾಮಂತರುಗಳಿಂದ ತುಂಬಿದ್ದ ಬ್ರಿಟಿಷ್ ಇಂಡಿಯವನ್ನು ಇಂಡಿಯವನ್ನಾಗಿಸಲು ಸಾಮ ಭೇದ ದಾನ ದಂಡ ಇವುಗಳನ್ನು ಸಂದರ್ಭಕ್ಕೆ ಸರಿಯಾಗಿ ಬಳಸಿದ ಹಿರಿಮೆ ಪಟೇಲರದ್ದು. ಪ್ರಜೆಗಳ ಆಶೋತ್ತರಗಳಿಗೆ ಹೊಂದಿಕೊಂಡಿದ್ದ ಮೈಸೂರು, ಇಂದೋರ್ ಮುಂತಾದ ಪ್ರಾಂತ್ಯಗಳ ಜೊತೆ ಗೌರವದಿಂದ ವರ್ತಿಸಿದರು. ಸೂಕ್ಷ್ಮ ವಾದ ಜಾಗಗಳಿಗೆ (ತಿರುವಾಂಕೂರು ಮತ್ತಿತರೆಡೆ) ವಿ. ಪಿ. ಮೆನನ್ ರಂತಹ ಪ್ರತಿನಿಧಿಗಳನ್ನು ಕಳಿಸಿ ಭಾರತದಲ್ಲಿ ತಮ್ಮ ಸಂಸ್ಥಾನವನ್ನು ಸೇರಿಸುವಂತೆ ಆಯಾ ರಾಜರನ್ನು ಒಲಿಸಿದರು. ಯುದ್ಧ ಮಾಡಲು ಹಿಂಜರಿಯದ, ಆದರೆ ನೇರಯುದ್ಧಕ್ಕೆ ಸಿದ್ಧರಿಲ್ಲದ ರಾಜರ ಜೊತೆ ಮಾತನಾಡುವಾಗ ಮಿಲಿಟರಿ ವ್ಯವಹಾರಗಳ ಡೈರೆಕ್ಟರ್ ಜನರಲ್ ಸ್ಯಾಮ್ ಮಾಣಿಕ್ ಶಾರನ್ನು ಜೊತೆಯಾಗಿಟ್ಟುಕೊಂಡು ಹೋಗುತ್ತಿದ್ದರು. ಜುನಾಗಢ್, ಜಮ್ಮು-ಕಾಶ್ಮೀರ, ಹೈದರಾಬಾದ್ ಈ ಮೂರು ರಾಜ್ಯಗಳ ರಾಜರು ಮಾತ್ರ ಪಟೇಲರ ಚಾಕಚಕ್ಯತೆಗೆ ಮತ್ತು ಭಾರತದ ಒಗ್ಗಟ್ಟಿಗೆ ಸವಾಲು ಹಾಕಿದಾಗ, ಸೈನ್ಯವನ್ನು ಕಳಿಸಿ, ರಾಜ್ಯಗಳನ್ನು ಆಕ್ರಮಿಸಿ, ಆಯಾ ರಾಜ್ಯಗಳು ಮತ್ತು ಪ್ರಜೆಗಳನ್ನು ಭಾರತದ ಭಾಗವಾಗಿಸಿದರು. ಭಾರತದ ರಾಜಕೀಯ ಏಕೀಕರಣ ೫೬೫ ಅರೆ-ಸ್ವತಂತ್ರ ಸಂಸ್ಥಾನಗಳಲ್ಲಿ ಹಂಚಿಹೋಗಿದ್ದ ಭಾರತವನ್ನು ಒಗ್ಗೂಡಿಸುವ ಮಹತ್ಕಾರ್ಯಕ್ಕೆ ಪಟೇಲರೇ ಸೂಕ್ತ ವ್ಯಕ್ತಿ ಎಂದು ಕಾಂಗ್ರೆಸ್ ಪಕ್ಷದ , ಮೌಂಟ್ ಬ್ಯಾಟನ್ನರ ಹಾಗೂ ಹಿರಿಯ ಬ್ರಿಟಿಷ್ ಅಧಿಕಾರಿಗಳ ಒಮ್ಮತದ ಅಭಿಪ್ರಾಯವಾಗಿತ್ತು. “ರಾಜ್ಯಗಳ ಈ ಸಮಸ್ಯೆ ಎಷ್ಟು ಸಂಕೀರ್ಣವಾಗಿದೆಯೆಂದರೆ ನೀವೊಬ್ಬರೇ ಅದನ್ನು ಬಗೆಹರಿಸಲು ಸಮರ್ಥರು” ಎಂದು ಗಾಂಧೀಜಿ ಕೂಡಾ ಪಟೇಲರಿಗೆ ಹೇಳಿದ್ದರು. ಈ ಗುರುತರ ಕಾರ್ಯವನ್ನು ಯಶಸ್ವಿಯಾಗಿ ಕೈಗೂಡಿಸುವ ಮನಃ ಸ್ಥೈರ್ಯ , ಚಾಣಾಕ್ಷತನ ಹಾಗೂ ಅಚಲತೆ ಇದ್ದವರಾದ ಪಟೇಲರು, ರಾಷ್ಟ್ರಹಿತಕ್ಕಾಗಿ ಮುಂದೆ ನಿಂತು ಸರ್ಕಾರದ ನಿರ್ಧಾರಗಳನ್ನು ಜಾರಿಮಾಡುವುದಕ್ಕೆ ತಯಾರಿದ್ದರೂ, ಸಂಸ್ಥಾನಿಕರೊಂದಿಗೆ ಸಂಧಾನ ನಡೆಸಲು ಬೇಕಾದ ಅನುಭವವನ್ನೂ, ಮುತ್ಸದ್ದಿತನವನ್ನೂ ಪಡೆದುಕೋಡಿದ್ದರು. ೧೯೪೭ರ ಮೇ ೬ರಂದು ಪಟೇಲರು ರಾಜರುಗಳ ಜೊತೆ ವಿಲೀನದ ಮಾತುಕತೆ ಪ್ರಾರಂಭಿಸಿದರು. ಈ ಮಾತುಕತೆಯ ಉದ್ದೇಶ ಈ ರಾಜರು ಭವಿಷ್ಯದ ಭಾರತ ಸರ್ಕಾರದೊಂದಿಗೆ ಸಹಕಾರ ಕೊಡುವುದಕ್ಕೂ ಹಾಗೂ ಮುಂದೆ ಉಂಟಾಗಬಹುದಾದ ಘರ್ಷಣೆಗಳನ್ನು ಈಗಲೇ ಚಿವುಟಿಹಾಕುವುದಾಗಿತ್ತು. ಬಹಳಷ್ಟು ಸಂಸ್ಥಾನಿಕ ರಾಜರುಗಳನ್ನು ತಮ್ಮ ಮನೆಗೆ ಆಹ್ವಾನಿಸಿ ಭೋಜನ, ಅಥವಾ ಚಹಾ ಸತ್ಕಾರ ಏರ್ಪಡಿಸಿದ ಪಟೇಲರು, ಈ ಸಾಮಾಜಿಕ ಹಾಗೂ ಅನಧಿಕೃತ ಭೇಟಿಗಳ ಮೂಲಕ ಅವರನ್ನು ವಿಲೀನದ ಪ್ರಕ್ರಿಯೆಯಲ್ಲಿ ತೊಡಗಿಸಿದರು.ಕಾಂಗ್ರೆಸ್ ಹಾಗೂ ಈ ರಾಜಕುಮಾರರಲ್ಲಿ ಮೂಲಭೂತವಾದ ಯಾವುದೇ ಚಕಮಕಿಯಿಲ್ಲ ಎಂದು ಪಟೇಲರು ಸ್ಪಷ್ಟಪಡಿಸಿದರೂ , ೧೯೪೭ ಆಗಸ್ಟ್ ೧೫ರ ಒಳಗಾಗಿ ಭಾರತದಲ್ಲಿ ವಿಲೀನವಾಗುವಂತೆ ಅವರನ್ನು ಆಗ್ರಹಿಸಿದರು. ತಮ್ಮ ಪ್ರಜೆಗಳ ಭವಿಷ್ಯದ ಹಿತಕ್ಕಾಗಿ ರಾಜ್ಯವನ್ನು ಭಾರತಕ್ಕೆ ಬಿಟ್ಟುಕೊಡುವಂತೆಯೂ, ಭಾರತದಿಂದ ಸ್ವತಂತ್ರವಾಗಿ ರಾಜ್ಯಭಾರ ಮಾಡುವುದರ , ಅದರಲ್ಲೂ ಮುಖ್ಯವಾಗಿ ಹೆಚ್ಚುತ್ತಿದ್ದ ಪ್ರತಿಭಟನೆಯ ವಿರುದ್ಧ, ನಿರರ್ಥಕತೆಯನ್ನೂ ಈ ೫೬೫ ರಾಜರುಗಳಿಗೆ ಮನದಟ್ಟು ಮಾಡಿಕೊಟ್ಟರು. ವಿಲೀನವಾದವರ ಪೀಳಿಗೆಯವರಿಗೆ ರಾಜಧನದ ಆಶ್ವಾಸನೆಯನ್ನೂ ಅವರು ನೀಡಿದರು. ಬರಿಯ ಮೂರು, ಕಾಶ್ಮೀರ, ಹೈದರಾಬಾದು ಹಾಗೂ ಜುನಾಘಢ, ರಾಜ್ಯಗಳನ್ನು ಹೊರತುಪಡಿಸಿ, ಬಾಕಿ ಎಲ್ಲಾ ಸಂಸ್ಥಾನಗಳೂ ವಿಲೀನಕ್ಕೆ ಒಪ್ಪಿದವು. ತಮ್ಮ ಸ್ವಂತ ರಾಜ್ಯ ಗುಜರಾತಿನಲ್ಲಿದ್ದ ಜುನಾಘಡ ಸಂಸ್ಥಾನ ಪಟೇಲರಿಗೆ ಸಹಜವಾಗಿಯೇ ಮಹತ್ವದ್ದಾಗಿತ್ತು. ಅಲ್ಲಿಯ ನವಾಬರ ಮೇಲೆ ಪಾಕಿಸ್ತಾನ ಸೇರುವಂತೆ ಸರ್ ಶಾ ನವಾಜ್ ಭುಟ್ಟೋ ಒತ್ತಡ ಹೇರಿದ್ದರು. ಜುನಾಗಡ ಪಾಕಿಸ್ತಾನದಿಂದ ಸಾಕಷ್ಟು ದೂರವಿದ್ದದ್ದಷ್ಟೇ ಅಲ್ಲ ಅಲ್ಲಿಯ ಜನಸಂಖ್ಯೆಯ ಶೇಕಡಾ ೮೦ ಹಿಂದೂಗಳಾಗಿದ್ದರು. ಪಟೇಲರು ಮುತ್ಸದ್ದಿತನದೊಡನೆ, ಬಲಪ್ರದರ್ಶನವನ್ನೂ ಮಾಡಿ ಪಾಕಿಸ್ತಾನ ಜುನಾಘಡದಿಂದ ದೂರವಿರುವಂತೆಯೂ, ಹಾಗೂ ಜುನಾಘಡವು ಭಾರತದೊಂದಿಗೆ ವಿಲೀನವಾಗಬೇಕೆಂದೂ ಒತ್ತಡ ಹಾಕಿದರು. *ಇದರೊಂದಿಗೆ ಸೇನೆಯ ತುಕಡಿಗಳನ್ನು ಜುನಾಘಡದ ಮೂರು ಪ್ರದೇಶಗಳಿಗೆ ಕಳುಹಿಸಿ ತಮ್ಮ ಧೃಢನಿರ್ಧಾರವನ್ನು ಪ್ರಕಟಪಡಿಸಿದರು. ವ್ಯಾಪಕ ಪ್ರತಿಭಟನೆಯ ನಂತರ ಜನಪರ ಸರ್ಕಾರ (ಆರ್ಜೀ ಹುಕುಮತ್) ರಚನೆಯಾದ ಮೇಲೆ ಭುಟ್ಟೋ ಮತ್ತು ನವಾಬ ಇಬ್ಬರೂ ಪಾಕಿಸ್ತಾನಕ್ಕೆ ಪಲಾಯನ ಮಾಡಿದರು. ಪಟೇಲರ ಆದೇಶದ ಮೇರೆ ಭಾರತೀಯ ಸೇನೆ ಹಾಗೂ ಪೋಲೀಸ್ ಪಡೆಗಳು ಜುನಾಘಡವನ್ನು ಪ್ರವೇಶಿಸಿದವು. ಮುಂದೆ ನಡೆದ ಜನಮತಗಣನೆಯಲ್ಲಿ ಶೇಕಡಾ ೯೯.೫ ಮಂದಿ ಭಾರತದೊಂದಿಗೆ ವಿಲೀನದ ಪರವಾಗಿ ಮತವಿತ್ತರು. ಇಂದಿನ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರದ ಭಾಗಗಳನ್ನೊಳಗೊಂಡ ಹೈದರಾಬಾದ್ ಭಾರತದ ಸಂಸ್ಥಾನಗಳಲ್ಲಿಯೇ ಅತಿ ದೊಡ್ಡದಾಗಿತ್ತು. ಅಲ್ಲಿನ ನಿಜಾಮ ಮುಸ್ಲಿಮರಾಗಿದ್ದರೂ ಜನಸಂಖ್ಯೆಯ ಶೇಕಡಾ ೮೦ ಹಿಂದೂಗಳಾಗಿದ್ದರು. ಜಿನ್ನಾ ಮೊದಲಾದ ಪಾಕಿಸ್ತಾನ ನಾಯಕರು ಹಾಗೂ ಬ್ರಿಟೀಷ್ ರ ಬೆಂಬಲದಿಂದ, ಹೈದರಾಬಾದ್ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ನಿಜಾಮ ಘೋಷಿಸಿದ. ಆತನ ಸೇನೆಗೆ ಅತ್ಯಾಧುನಿಕ ಸಿಡ್ನಿ ಕಾಟನ್ ಬಂದೂಕುಗಳು, ಮದ್ದುಗುಂಡುಗಳನ್ನು ಮತ್ತು ತರಬೇತಿಯನ್ನು ಬ್ರಿಟೀಷ್ ರು ನೀಡಿದರು.ಕಾಸೀಂ ರಜ್ವಿಯಂಬ ಮತಾಂಧ ಮತ್ತು ಉಗ್ರವಾದಿಯ ಮುಂದಾಳುತ್ವದಲ್ಲಿ ಸಾವಿರಾರು ಜನ ರಜಾಕಾರರು, ಹೈದರಾಬಾದ್ ಸಂಸ್ಥಾನದಲ್ಲಿ ಜನಸಾಮಾನ್ಯರ ಮೇಲೆ ಆಕ್ರಮಣ ನೆಡೆಸಿದರು. ಮಹಿಳೆಯರ ಮಾನಭಂಗ, ಮಕ್ಕಳ ಹತ್ಯೆ, ಜನರ ಹತ್ಯೆ ಇವು ಸಾವಿರಾರು ಕಡೆ ನೆಡೆದವು. ಸ್ವಾಮಿ ರಮಾನಂದತೀರ್ಥರ ನೇತೃತ್ವದಲ್ಲಿ ಹೈದರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟ ನೆಡೆಯಿತು. ಕರ್ನಾಟಕದ ಮುಂಡರಗಿಯ ಶಿಬಿರಕ್ಕೆ ಕೇಂದ್ರ ಮಂತ್ರಿ ಗಾಡ್ಗೀಳರನ್ನು ಕಳುಹಿಸಿದ ಪಟೇಲ್ ರು, ಈ ಹೋರಾಟಕ್ಕೆ ಬೆಂಬಲ ನೀಡಿ ಪ್ರೋತ್ಸಾಹಿಸಿದರು. ಯುದ್ಧ ಭೀತಿಯಿಂದ ಹತಾಶರಾಗಿದ್ದ ಮೌಂಟ್ ಬ್ಯಾಟನ್ನರ ಪ್ರಯತ್ನದಿಂದ ತಟಸ್ಥ ಒಪ್ಪಂದವಾದರೂ, ನಿಜಾಮ ತನ್ನ ನಿಲುವನ್ನು ಬದಲಾಯಿಸಿ, ಈ ಒಪ್ಪಂದವನ್ನು ತಿರಸ್ಕರಿಸಿದ. ವಿಶ್ವಸಂಸ್ಥೆಗೆ ಈ ವಿವಾದವನ್ನು ಒಪ್ಪಿಸುವ ಕುತಂತ್ರ ಅವನದಾಗಿತ್ತು. ೧೯೪೮ರ ಸೆಪ್ಟೆಂಬರಿನಲ್ಲಿ ಪಟೇಲರು ಭಾರತ ಇನ್ನು ಕಾಯಲಾಗದು ಎಂದು ರಾಜಾಜಿಯವರನ್ನು ಒಪ್ಪಿಸಿ, ಹೈದರಾಬಾದನ್ನು ವಶಕ್ಕೆ ತೆಗೆದುಕೊಳ್ಳಲು ಭಾರತದ ಸೇನೆಯನ್ನು ಕಳುಹಿಸಿದರು. ಆಪರೇಷನ್ ಪೋಲೋ ಎಂಬ ಈ ಕಾರ್ಯಾಚರಣೆಯಲ್ಲಿ ಸಾವಿರಾರು ರಜಾಕಾರರು ಕೊಲ್ಲಲ್ಪಟ್ಟರು. ೧೯೪೮ ಸೆಪ್ಟೆ೦ಬರ್ ೧೭ ರಂದು ಈಗಿನ ಬೀದರ್ ಜಿಲ್ಲೆಯ ಹುಮುನಾಬಾದಿನಲ್ಲಿ ನಿಜಾಮರ ಸೈನ್ಯ ಶರಣಾಯಿತು. ಹೈದರಾಬಾದು ಪ್ರಾ೦ತ್ಯ ಸುರಕ್ಷಿತವಾಗಿ ಭಾರತದ ಭಾಗವಾಯಿತು. ಕೇವಲ ಎರಡುದಿನವಷ್ಟೇ ನಡೆದ ಕಾರ್ಯಚರಣೆಯನ್ನು, ಭಾರತ ಸರಕಾರದ ದಾಖಲೆಗಳಲ್ಲಿ ಪೋಲೀಸ್ ಕಾರ್ಯಚರಣೆಯೆ೦ದು ಕರೆಯಲಾಗಿದೆ. ನಿಜಾಮರ ಸೈನ್ಯದ ಸೈನ್ಯಾಧಿಕಾರಿ ಒಬ್ಬ ಬ್ರಿಟಿಷ್ ಆಗಿದ್ದನೆ೦ಬುವುದು ಇಲ್ಲಿ ಗಮನಾರ್ಹ. ಬಲಪ್ರಯೋಗದಿಂದ ಹೈದರಾಬಾದನ್ನು ವಶಪಡಿಸಿಕೊಂಡಲ್ಲಿ ಅದು ಹಿಂದೂ-ಮುಸ್ಲಿಮ್ ದಂಗೆಗಳಿಗೆ ಅವಕಾಶ ಕೊಡಬಹುದು ಎಂದು ಮೌಂಟ್ ಬ್ಯಾಟನ್ ಮತ್ತು ನೆಹರೂ ಶಂಕಿಸಿ ಹಿಂಜರಿದರೂ, ಪಟೇಲರು ಹೈದರಾಬಾದನ್ನು ಹಾಗೆಯೇ ಬಿಟ್ಟಲ್ಲಿ ಅದು ಭಾರತದ ಪ್ರತಿಷ್ಟೆಗೇ ಸವಾಲಾಗುವುದಷ್ಟೇ ಅಲ್ಲ, ಅದರಿಂದಾಗಿ ಹಿಂದೂಗಳಾಗಲೀ, ಮಸಲ್ಮಾನರಾಗಲೀ ಆ ರಾಜ್ಯದಲ್ಲಿ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಯಾವುದೇ ನಾಗರೀಕ ಪ್ರತಿಭಟನೆಯಿಲ್ಲದೇ ಯಶಸ್ವಿಯಾದ ಹೈದರಾಬಾದಿನ ವಿಲೀನವನ್ನು ಅನೇಕ ಭಾರತೀಯ ಮುಸ್ಲಿಮರು ಕೊಂಡಾಡಿದರು. ನಿಜಾಮರ ಮೇಲೆ ಸಂತಾಪವಿದ್ದರೂ, ಪಟೇಲರು ಅವರನ್ನು ರಾಜ್ಯದ ಅಲಂಕಾರಿಕ ಮುಖ್ಯಸ್ಥನನ್ನಾಗಿ ನೇಮಿಸಿದರು. ಮುಂದೆ ನಡೆದ ಮಾತುಕತೆಯಲ್ಲಿ ನಿಜಾಮರು ಪಟೇಲರನ್ನು ಕ್ಷಮಾಪಣೆ ಕೇಳಿದ್ದರಿಂದ ಪಟೇಲರು ದೊಡ್ಡ ಮನಸ್ಸಿನಿಂದ ವೈರವನ್ನು ತಮ್ಮ ಮನಸ್ಸಿನಿಂದ ತೆಗೆದುಹಾಕಿದರು. ಹೈದರಾಬಾದು ಮತ್ತು ಜುನಾಘಡವನ್ನು ಭಾರತಕ್ಕೆ ಜಿನ್ನಾ ಬಿಟ್ಟುಕೊಟ್ಟರೆ , ಕಾಶ್ಮೀರ ಪಾಕಿಸ್ತಾನಕ್ಕೆ ಹೋಗುವುದಕ್ಕೆ ಅಡ್ಡಿಯಿಲ್ಲ ಎಂಬ ವಿಚಾರ ಪಟೇಲರ ಮನಸ್ಸಿನಲ್ಲಿ ಇರಬಹುದು ಎಂದು ರಾಜಮೋಹನ ಗಾಂಧಿ ಊಹಿಸುತ್ತಾರೆ. ತಮ್ಮ ಪಟೇಲ್ : ಎ ಲೈಫ್ ಎಂಬ ಪುಸ್ತಕದಲ್ಲಿ ಹೈದರಾಬಾದು ಮತ್ತು ಜುನಾಘಡವನ್ನು ಜಿನ್ನಾ ತಮ್ಮ ಸಂಘರ್ಷದ ಭಾಗವಾಗಬಯಸಿದ್ದರು ಎಂದು ಪ್ರತಿಪಾದಿಸುತ್ತಾರೆ. ಭಾರತ ಹೈದರಾಬಾದು ಮತ್ತು ಜುನಾಘಡಗಳಲ್ಲಿ ಜನಮತಗಣನೆ ಮಾಡಬೇಕು ಎಂಬ ಬೇಡಿಕೆಯನ್ನಿಟ್ಟ ಜಿನ್ನಾರ ಉದ್ದೇಶ, ಮುಂದೆ ಇದೇ ತತ್ವವನ್ನು ಕಾಶ್ಮೀರಕ್ಕೂ ಅನ್ವಯಿಸಬೇಕಾಗುತ್ತದೆ ಹಾಗೂ ಜಿನ್ನಾರ ನಂಬಿದ್ದಂತೆ, ಅಲ್ಲಿಯ ಮುಸ್ಲಿಮ್ ಬಹುಸಂಖ್ಯಾತರು ಪಾಕಿಸ್ತಾನದ ಪರವಾಗಿ ಒಲವು ತೋರಿಸುವರು , ಎಂದಿತ್ತು ಎಂಬ ಅಭಿಪ್ರಾಯವೂ ಇದೆ. ಜುನಾಘಡ ಭಾರತದ ಭಾಗವಾದ ಮೇಲೆ , ಅಲ್ಲಿಯ ಬಹಾವುದ್ದೀನ್ ಕಾಲೇಜಿನಲ್ಲಿ ಮಾತನಾಡುತ್ತಾ ಪಟೇಲರು ಹೇಳುತ್ತಾರೆ: " ಹೈದರಾಬಾದು ಎಚ್ಚರಿಕೆಯಿಂದಿಲ್ಲದಿದ್ದರೆ, ಜುನಾಘಡದ ಗತಿಯೇ ಅದಕ್ಕೂ ಆದೀತು. ಪಾಕಿಸ್ತಾನ ಕಾಶ್ಮೀರವನ್ನು ಜುನಾಘಡದ ವಿರುದ್ಧ ದಾಳವಾಗಿ ಉಪಯೋಗಿಸಲು ನೋಡಿದೆ. ಜನಾಭಿಪ್ರಾಯದ ತಳಹದಿಯ ಮೇಲೆ ಈ ವಿಷಯವನ್ನು ಬಗೆಹರಿಸಲು ನಾವು ಪಾಕಿಸ್ತಾನಕ್ಕೆ ಸೂಚಿಸಿದಾಗ, ಕಾಶ್ಮೀರಕ್ಕೆ ಈ ನೀತಿಯನ್ನು ಅನುಸರಿಸುವಂತೆ ಅವರಿಂದ ತಕ್ಷಣದ ಪ್ರತಿಕ್ರಿಯೆ ಬಂತು. ನೀವು ಹೈದರಾಬಾದಿನಲ್ಲಿ ಈ ನೀತಿಗೆ ಒಪ್ಪಿದರೆ ನಾವು ಕಾಶ್ಮೀರದಲ್ಲಿ ಒಪ್ಪಬಹುದು ಎಂದು ಅದಕ್ಕೆ ನಾವು ಜವಾಬು ಕೊಟ್ಟೆವು.” ಭಾರತವನ್ನು ಒಟ್ಟುಗೂಡಿಸುವುದು ಸುಲಭದಕೆಲಸವೇನಾಗಿರಲಿಲ್ಲ. ಪಟೇಲರ ಗಣನೀಯಸೇವೆಯನ್ನು ಗಮನದಲ್ಲಿಟ್ಟು ಅವರನ್ನು ಭಾರತದ ಬಿಸ್ಮಾರ್ಕ್ ಎಂದು ಕರೆಯಲಾಗುತ್ತದೆ. ಪಟೇಲರು ಭಾರತದ ಕಾನ್ಸ್ಟಿಟ್ಯುಯೆಂಟ್ ಅಸೆಂಬ್ಲಿಯ ಹಿರಿಯ ಸದಸ್ಯರಾಗಿದ್ದರು. ಭಾರತದ ಸಂವಿಧಾನದಲ್ಲಿ ನಾಗರಿಕ ಸ್ವಾತಂತ್ರ್ಯದ ರೂಪರೇಷೆಗಳನ್ನು ನಿರ್ಧರಿಸುವುದಕ್ಕಾಗಿ ರಚಿಸಲಾಗಿದ್ದ ಅನೇಕ ಮಹತ್ವದ ಸಮಿತಿಗಳ ನಾಯಕರಾಗಿದ್ದರು. ಸರಕಾರದ ರಕ್ಷಣಾತ್ಮಕ ಅಧಿಕಾರವಿರುವ, ವ್ಯಾಪಕ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಅವರು ಬೆಂಬಲ ನೀಡಿದರು. ರಾಷ್ಟ್ರೀಕೃತ ಸಿವಿಲ್ ಸರ್ವೀಸನ್ನು ಅವರು ಬಲವಾಗಿ ಬೆಂಬಲಿಸಿದ್ದಲ್ಲದೇ , ಆಸ್ತಿ ಹಕ್ಕು ಮತ್ತು ರಾಜಧನದ ಕಲಮುಗಳನ್ನೂ ಸೇರಿಸಿದರು. ಗೌರವ,ಪ್ರಶಸ್ತಿ ಗುಜರಾತಿನ ಜನರಿಂದ ಗೌರವಾರ್ಥ 'ಸರ್ದಾರ್' ಎಂಬ ಬಿರುದು ಪಡೆದರು. ಭಾರತದಲ್ಲಿದ್ದ ಪುಟ್ಟ ಪುಟ್ಟ ರಾಜರಿಂದಾಳಲ್ಪಟ್ಟ ರಾಜ್ಯಗಳನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಇವರು 'ಉಕ್ಕಿನ ಮನುಷ್ಯ' ರೆಂದೇ ಅಮರರಾದರು. ಸರ್ದಾರ್ ಪಟೇಲರಿಗೆ ೧೯೯೧ ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಏಕತಾ ಮೂರ್ತಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 182 ಮೀಟರ್‌ ಎತ್ತರದ "ಏಕತೆಯ ಮೂರ್ತಿ"ಯನ್ನು ೩೧ ಅಕ್ಟೋಬರ್ ೨೦೧೮ ರಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾರ್ಪಣೆ ಮಾಡಿದರು. ಗುಜರಾತಿನ ನರ್ಮದಾ ಸರೋವರ ದಂಡೆಯ ಮೇಲೆ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ. ವಡೋದರಾ ಸಮೀಪದ ಸಾಧು ಬೆಟ್ಟದಿಂದ 3.2 ಕಿಮೀ ದೂರದಲ್ಲಿದೆ. 182 ಮೀಟರ್ (597 ಅಡಿ) ಎತ್ತರದ, ಇದು ವಿಶ್ವದ ಅತಿ ಎತ್ತರದ ಪ್ರತಿಮೆಯಾಗಿದೆ. ಇದು ವಿಶ್ವದ ಎಂಟನೇ ಅದ್ಭುತ... ಉಲ್ಲೇಖ {{ಜನನನಿಧನ|೧೮೭೫|೧೯೫೦ ಸ್ವಾತಂತ್ರ್ಯ ಹೋರಾಟಗಾರರು ಭಾರತದ ಗಣ್ಯರು ಭಾರತ ರತ್ನ ಪುರಸ್ಕೃತರು ಭಾರತೀಯ ಇತಿಹಾಸದ ಪ್ರಮುಖರು
1020
https://kn.wikipedia.org/wiki/%E0%B2%B0%E0%B2%BE%E0%B2%9C%E0%B2%A7%E0%B2%BE%E0%B2%A8%E0%B2%BF
ರಾಜಧಾನಿ
ರಾಜಧಾನಿ - (ಆಂಗ್ಲದಲ್ಲಿ Capital), ದೇಶದ ಅಥವಾ ರಾಜ್ಯದ ರಾಜಕೀಯ ಕೇಂದ್ರವನ್ನುದ್ದೇಶಿಸಿ ಹೇಳುವ ಹೆಸರು. ಹಿಂದಿನ ಕಾಲದಲ್ಲಿ ಸಂಸ್ಥಾನಗಳ ನಿಯಂತ್ರಣಕ್ಕೆ ಕೇಂದ್ರವಾಗಿದ್ದ ಊರುಗಳಿಗೂ ರಾಜಧಾನಿ ಎನ್ನುವ ಬಳಕೆಯುಂಟು. ಪ್ರಮುಖ ದೇಶಗಳ ರಾಜಧಾನಿಗಳ ಪಟ್ಟಿ ಭಾರತ - ನವದೆಹಲಿ ಶ್ರೀಲಂಕಾ - ಕೊಲಂಬೊ ಪಾಕಿಸ್ತಾನ - ಇಸ್ಲಾಮಾಬಾದ್ ಅಮೇರಿಕ - ವಾಷಿಂಗ್ಟನ್ ರಶ್ಶಿಯಾ - ಮಾಸ್ಕೊ ಫ್ರಾನ್ಸ್ - ಪ್ಯಾರಿಸ್ ಕೆನಡಾ - ಒಟ್ಟಾವ ಇಟಲಿ - ರೋಮ್ ಬಾಂಗ್ಲಾದೇಶ - ಢಾಕಾ ನೇಪಾಳ - ಕಠ್ಮಂಡು ಇಂಗ್ಲೆಂಡ್ - ಲಂಡನ್ ಇರಾಕ್ - ಬಾಗ್ದಾದ್ ಇರಾನ್ - ತೆಹ್ರಾನ್ ಭಾರತ ದೇಶದ ಸಂಘ ರಾಜ್ಯ ಕ್ಷೇತ್ರಗಳ(ಕೇಂದ್ರಾಡಳಿತ ಪ್ರದೇಶಗಳು) ರಾಜಧಾನಿಗಳ ಪಟ್ಟಿ ಅಂಡಮಾನ್ ಮತ್ತು ನಿಕೊಬಾರ್ ದ್ವೀಪಗಳು - ಪೋರ್ಟ್ ಬ್ಲೇರ್ ಚಂಡೀಗಡ - ಚಂಡೀಗಡ ದಾದ್ರ ಮತ್ತು ನಾಗರ್ ಹವೆಲಿ - ದಾದ್ರ ದಮನ್ ಮತ್ತು ದಿಯು - ದಮನ್ ಲಕ್ಷದ್ವೀಪ - ಕವರಟ್ಟಿ ಪೊಂಡಿಚೆರಿ - ಪಾಂಡಿಚೆರಿ ನಗರ ಭಾರತ ದೇಶದ ರಾಜ್ಯಗಳ ರಾಜಧಾನಿಗಳ ಪಟ್ಟಿ ತೆಲಂಗಾಣ - ಹೈದರಾಬಾದ್ ಅರುಣಾಚಲ ಪ್ರದೇಶ - ಇಟಾನಗರ ಆಸ್ಸಾಮ್ - ದಿಸ್ಪುರ ಬಿಹಾರ - ಪಾಟ್ನಾ ಛತ್ತೀಸ್‌ಘಡ್ - ರಾಯಪುರ ದೆಹಲಿ - ನವ ದೆಹಲಿ ಗೋವಾ - ಪಣಜಿ ಗುಜರಾತ - ಗಾಂಧಿನಗರ ಹಿಮಾಚಲ ಪ್ರದೇಶ - ಶಿಮ್ಲಾ ಜಮ್ಮು ಮತ್ತು ಕಾಶ್ಮೀರ - ಚಳಿಗಾಲದಲ್ಲಿ ಶ್ರೀನಗರ ಹಾಗೂ ಬೇಸಿಗೆಕಾಲದಲ್ಲಿ ಜಮ್ಮು ಝಾರ್ಖಂಡ - ರಾಂಚಿ ಕರ್ನಾಟಕ - ಬೆಂಗಳೂರು ಕೇರಳ - ತಿರುವನಂತಪುರಂ ಮಧ್ಯ ಪ್ರದೇಶ - ಭೂಪಾಲ್ ಮಹಾರಾಷ್ಟ್ರ - ಮುಂಬಯಿ ಮಣಿಪುರ - ಇಂಫಾಲ ಮೇಘಾಲಯ - ಶಿಲ್ಲಾಂಗ ಮಿಝೋರಾಮ್ - ಐಝ್ವಾಲ್ ನಾಗಾಲ್ಯಾಂಡ್ - ಕೊಹಿಮಾ ಒಡಿಶಾ - ಭುವನೇಶ್ವರ ಹರಿಯಾಣ ಮತ್ತು ಪಂಜಾಬ - ಚಂಡೀಗಡ ರಾಜಸ್ಥಾನ - ಜೈಪುರ ಸಿಕ್ಕಿಂ - ಗ್ಯಾಂಗಟಕ್ ಸೀಮಾಂಧ್ರ - ಅಮರಾವತಿ ತಮಿಳುನಾಡು - ಚೆನ್ನೈ ತ್ರಿಪುರ - ಆಗರ್ತಲ ಉತ್ತರ ಪ್ರದೇಶ - ಲಕ್ನೊ ಉತ್ತರಾಂಚಲ - ಡೆಹ್ರಾಡೂನ್ ಪಶ್ಚಿಮ ಬಂಗಾಳ - ಕಲ್ಕತ್ತಾ ಆಡಳಿತ ವಿಭಾಗಗಳು ರಾಜಧಾನಿಗಳು
1021
https://kn.wikipedia.org/wiki/%E0%B2%AA%E0%B3%8D%E0%B2%AF%E0%B2%BE%E0%B2%B0%E0%B2%BF%E0%B2%B8%E0%B3%8D
ಪ್ಯಾರಿಸ್
ಪ್ಯಾರಿಸ್ ಫ್ರಾನ್ಸ್ ದೇಶದ ರಾಜಧಾನಿ ಮತ್ತು ಅದರ ಅತ್ಯಂತ ದೊಡ್ಡ ನಗರ. ಇದು ಫ್ರಾನ್ಸ್‍ನ ಉತ್ತರ ಭಾಗದಲ್ಲಿರುವ ಸೈನ್ ನದಿಯ ತೀರದಲ್ಲಿ ಸ್ಥಿತವಾಗಿದೆ. ಕನ್ನಡ ಸಿನೆಮಾದಲ್ಲಿ ಪ್ಯಾರಿಸ್ ಇತ್ತೀಚೆಗೆ ನಾಗತಿಹಳ್ಳಿ ಚಂದ್ರಶೇಖರ್ ಅವರು ನಿರ್ದೇಶಿಸಿದ ಸಿನೆಮಾ ಪ್ಯಾರಿಸ್ ಪ್ರಣಯ ಹೊರಬಂದಿತ್ತು. ಇದರ ಕಥೆ ಪ್ಯಾರಿಸ್ ಸುತ್ತ ಹೆಣೆಯಲಾಗಿದ್ದು, ಪ್ಯಾರಿಸ್‌ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಪ್ಯಾರಿಸ್ ಪ್ರವಾಸೋದ್ಯಮ ಮುಖ್ಯ ಆಕರ್ಷಣೆಗಳು ಪುಟ ಸೃಷ್ಟಿಯಲ್ಲಿ ಇದೆ </big> ಪ್ಯಾರಿಸ್ ಮತ್ತು ಭಾರತ</big> ಪುಟ ಸೃಷ್ಟಿಯಲ್ಲಿ ಇದೆ </big> ಪ್ಯಾರಿಸ್ ಸುತ್ತಾಟ </big> ಪ್ಯಾರಿಸ್ ಸುತ್ತಡಾಲು ಎಲ್ಲ ತರಹದ ವ್ಯವಸ್ತೆ ಕಲ್ಪಿಸಿಲಾಗಿದೆ. ಸಾಮಾನ್ಯವಾಗಿ ಮೆಟ್ರೊ ರೈಲು </big> ಪ್ಯಾರಿಸ್ ಎರಡು ದಿವಸದ ಪ್ರಯಾಣ</big> ಪುಟ ಸೃಷ್ಟಿಯಲ್ಲಿ ಇದೆ ಉಲ್ಲೇಖಗಳು ಯುರೋಪ್ ಖಂಡದ ರಾಜಧಾನಿ ನಗರಗಳು ಫ್ರಾನ್ಸ್
1023
https://kn.wikipedia.org/wiki/%E0%B2%B9%E0%B2%BE%E0%B2%B8%E0%B2%A8%20%E0%B2%9C%E0%B2%BF%E0%B2%B2%E0%B3%8D%E0%B2%B2%E0%B3%86
ಹಾಸನ ಜಿಲ್ಲೆ
ಹಾಸನವು ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಕಾರ್ಯಸ್ಥಾನ. ದಕ್ಷಿಣ ಭಾರತದ ವಿಸ್ತಾರದ ಆಳ್ವಿಕೆಯನ್ನೊಳಗೊಂಡ ಮತ್ತು ಬಲಿಷ್ಠ ಸಾಮ್ರಾಜ್ಯಗಳಲ್ಲಿ ಒಂದಾದ ಹೊಯ್ಸಳರು ತಮ್ಮ ಆಳ್ವಿಕೆಯ ಉತ್ತುಂಗದಲ್ಲಿ ಹಾಸನ ಜಿಲ್ಲೆಯನ್ನು ತಮ್ಮ ಆಡಳಿತದ ಕೇಂದ್ರ ಸ್ಥಾನವನ್ನಾಗಿಸಿಕೊಂಡಿದ್ದರು. ಹಾಸನ ಜಿಲ್ಲೆಯ ಬೇಲೂರು ಅವರ ರಾಜಧಾನಿಯಾಗಿತ್ತು. ಮುಂದೆ ಅವರು ೧೦೦೦ - ೧೩೩೪ರ ಕಾಲದಲ್ಲಿ ತಮ್ಮ ರಾಜಧಾನಿಯನ್ನು ಹಳೇಬೀಡಿಗೆ ವರ್ಗಾಯಿಸಿಕೊಂಡರು. ಇಂದು ಹಾಸನ ಜಿಲ್ಲೆಯು ತನ್ನ ಹೊಯ್ಸಳ ವಾಸ್ತುಶಿಲ್ಪಕ್ಕಾಗಿ ಪ್ರಪಂಚದಾದ್ಯಂತ ಗುರುತಿಸಿಕೊಂಡಿದೆ. ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಮತ್ತು ಪಟ್ಟಣಗಳಲ್ಲಿ ಸುಮಾರು ೫೦ಕ್ಕೂ ಹೆಚ್ಚು ಶಿಲ್ಪಕಲೆಗಳ ಆಗರಗಳು ಗುರುತಿಸಲ್ಪಟ್ಟಿವೆ. ಭಾರತೀಯ ರಾಷ್ಟ್ರೀಯ ಉಪಗ್ರಹ ವ್ಯವಸ್ಥೆಯನ್ನು ನಿಯಂತ್ರಿಸುವ ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ ನ ಮಾಸ್ಟರ್ ಕಂಟ್ರೋಲ್ ಕೇಂದ್ರ ಹಾಸನದಲ್ಲಿದೆ. ತಾಲ್ಲೂಕುಗಳು ಹಾಸನ ಆಲೂರು ಬೇಲೂರು ಅರಸೀಕೆರೆ ಸಕಲೇಶಪುರ ಚನ್ನರಾಯಪಟ್ಟಣ ಅರಕಲಗೂಡು ಹೊಳೇನರಸೀಪುರ ಇತಿಹಾಸ ಹಾಸನವು ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಕಾರ್ಯಸ್ತಾನ. ದಕ್ಷಿಣ ಭಾರತದ ವಿಸ್ತಾರವಾದ ಆಳ್ವಿಕೆಯನೊಳಗೊಂಡು ಮತ್ತು ಬಲಿಷ್ಠ ಸಾಮ್ರಾಜ್ಯಗಳಲ್ಲಿ ಒಂದಾದ ಹೊಯ್ಸಳ ರು ಆಳ್ವಿಕೆಯ ಉತ್ತುಂಗದಲ್ಲಿ ಹಾಸನ ಜಿಲ್ಲೆಯನ್ನು ತಮ್ಮ ಆಡಳಿತದ ಕೇಂದ್ರ ಸ್ಥಾನವಾಗಿರಿಸಿಕೊಂಡಿದ್ದರು. ಇಂದು ಹಾಸನ ಜಿಲ್ಲೆಯು ಹೊಯ್ಸಳ ವಾಸ್ತುಶಿಲ್ಪಕ್ಕಾಗಿ ಪ್ರಖ್ಯಾತವಾಗಿದೆ. * ಬಡವರ ಊಟಿ, ಮಲೆನಾಡಿನ ಹೆಬ್ಬಾಗಿಲು, ಶಿಲ್ಪಕಲೆಗಳ ಬೀಡು, ಹೊಯ್ಸಳರ ನಾಡು ಎಂದು ಕರೆಯುತ್ತಾರೆ. ಭಾರತೀಯ ರಾಷ್ಟ್ರೀಯ ಉಪಗ್ರಹ ವ್ಯವಸ್ಥೆಯ ನಿಯಂತ್ರಿಸುವ ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗ ನೈಸೇ ಶನ್ ನ ಮಾಸ್ಟರ್ ಕಂಟ್ರೋಲ್ ಪೆಸಿಲಿಟಿ ಕೂಡ ಎಲ್ಲೇ ಇರುವುದು. ಪ್ರಾಚೀನ ಇತಿಹಾಸ ಕ್ರಿಸ್ತ ಶಕ ೩೦೦ ರಲ್ಲಿ ಹಾಸನವು ಮೌರ್ಯ ಸಾಮ್ರಾಜ್ಯದ ಭಾಗವಾಗಿತ್ತು.. ಜೈನ ಮುನಿ ಭದ್ರಬಾಹುವು ಕ್ರಿಸ್ತ ಶಕ ೩ನೇ ಶತಮಾನದಲ್ಲಿ ಉತ್ತರ ಭಾರತದಿಂದ ಆಗಮಿಸಿದನು. ಕೆಲವು ಇತಿಹಾಸಕಾರರು ಚಕ್ರವರ್ತಿ ಅಶೋಕನ ಅಜ್ಜ ಚಂದ್ರಗುಪ್ತ ಮೌರ್ಯನು ಯತಿ ಭದ್ರಬಾಹು ಮತ್ತು ಆವರ ಶಿಷ್ಯರೊಂದಿಗೆ ಶ್ರವಣಬೆಳಗೊಳಕ್ಕೆ ಬಂದು ಗತಿಸಿದರು ಎಂಬುದಾಗಿ ಹೇಳುತ್ತಾರೆ. ಕೆಲ ಇತಿಹಾಸಕಾರರು ರಾಜ ಅಶೋಕನ ಮೊಮ್ಮಗನು ಆಗಮಿಸಿದ್ದನು ಎಂದೂ ಹೇಳುತ್ತಾರೆ. ಚಂದ್ರಗುಪ್ತ ಬಸದಿ ಎಂಬ ಹೆಸರಿನ ಒಂದು ಬಸದಿ ಅಥವಾ ಸ್ಮಾರಕವು ಇಂದಿಗೂ ಅಸ್ತಿತ್ವದಲ್ಲಿದೆ. ಚಂದ್ರಗುಪ್ತ ಮೌರ್ಯನ ವಂಶಾವಳಿಯ ಬಗ್ಗೆ ಸತ್ಯ ವಿಷಯಗಳು ಏನೇ ಇದ್ದರೂ ಇದು ಶ್ರವಣಬೆಳಗೊಳವು ಹದಿನೇಳು ಶತಮಾನಗಳಿಂದ ಜೈನರ ಶ್ರದ್ಧಾ ಕೇಂದ್ರವಾಗಿದೆ ಎಂಬುದನ್ನು ತಿಳಿಸುತ್ತದೆ. ಮಧ್ಯಯುಗ ನಂತರ ಹಾಸನವು ತಲಕಾಡು ಗಂಗ ರಾಜವಂಶದ ಆಳ್ವಿಕೆಗೆ ಒಳಪಟ್ಟಿತು. ಆರಂಭದಲ್ಲಿ ಗಂಗರು ೩೫೦-೫೫೦ ನೆ ಶತಮಾನದವರೆಗೆ ಆಳಿದರು. ನಂತರ ಚಾಲುಕ್ಯರು ಮತ್ತು ರಾಷ್ಟ್ರಕೂಟರ ಸಾಮಂತರು ಈ ಪ್ರದೇಶದ ಆಳ್ವಿಕೆ ಮುಂದುವರೆಸಿದರು. ೧೦ ನೇ ಶತಮಾನದ ಕೊನೆಯ ಭಾಗದಲ್ಲಿ, ಶ್ರವಣಬೆಳಗೊಳದಲ್ಲಿ ಅನೇಕ ಜೈನ ಸ್ಮಾರಕಗಳನ್ನು ನಿರ್ಮಿಸಲಾಯಿತು. ಗೋಮಟೇಶ್ವರ ವಿಗ್ರಹವು ಐವತ್ತೇಳು ಅಡಿ ಎತ್ತರದ ಏಕಶಿಲೆಯ ವಿಗ್ರಹವು ಸೇರಿದಂತೆ ಹಲವು ಸ್ಮಾರಕಗಳನ್ನು ಗಂಗರ ದಂಡ ನಾಯಕ ಚಾಮುಂಡರಾಯನು ನಿರ್ಮಿಸಿದನು. ಗಂಗರ ಆಳ್ವಿಕೆಯ ಸಮಯದಲ್ಲಿ, ಶ್ರವಣಬೆಳಗೊಳ ಪ್ರಮುಖ ಧಾರ್ಮಿಕ ಕೇಂದ್ರವಾಗಿತ್ತು. ಇಂದು ಇದು ದೊಡ್ಡ ಪುರಾತತ್ವ ಪ್ರಾಮುಖ್ಯತೆಯ ಒಂದು ಸ್ಥಳವಾಗಿದೆ. ಪಟ್ಟಣದ ಹೆಸರು "ಶ್ರವಣ ಅಥವಾ ಶ್ರಮಣ" ಎಂಬ ಪದದಿಂದ ಪಡೆಯಲಾಗಿದೆ. ಶ್ರವಣ ಅಥವಾ ಶ್ರಮಣ ಎಂದರೆ ಜೈನ ಸಂನ್ಯಾಸಿ ಎಂದರ್ಥ ಮತ್ತು ಬೆಳಗೊಳ ಅಥವಾ ಬಿಳಿಯ ಕೊಳ ಎಂದರೆ ಕನ್ನಡದಲ್ಲಿ ಶುಭ್ರ ಬಿಳಿಯ ಬಣ್ಣದ ಕೊಳ ಎಂದರ್ಥ. ಶ್ರವಣಬೆಳಗೊಳದ ಸುತ್ತುಮುತ್ತಲೂ ಸುಮಾರು ೮೦೦ ಶಾಸನಗಳನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ ೮೦ ಶಾಸನಗಳು ಹೊಯ್ಸಳರ ಆಳ್ವಿಕೆಯ ಕಾಲ ೬೦೦ - ೧೮೩೦ ಸಿಇ ಗೆ ಸಂಬಂಧ ಪಟ್ಟಿವೆ. ಈ ಶಾಸನಗಳು ಇತಿಹಾಸವನ್ನು ತಿಳಿಯಲು ಬಹಳ ಸಹಾಯಕವಾಗಿದೆ. ಇದರಿಂದ ಬರಿಯ ಹಾಸನ ಜಿಲ್ಲೆಯ ಇತಿಹಾಸ ಮಾತ್ರವಲ್ಲದೇ ನಮ್ಮ ಕರ್ನಾಟಕವನ್ನು ಆಳಿದ ಎಲ್ಲಾ ಸಾಮ್ರಾಜ್ಯಗಳ ಇತಿಹಾಸವನ್ನೂ ಅರ್ಥಮಾಡಿಕೊಳ್ಳುವಲ್ಲಿ ಸಹಾಯಕವಾಗಿದೆ. ಶಿಲಾಶಾಸನಗಳು ಕನ್ನಡ, ಸಂಸ್ಕೃತ, ತಮಿಳು, ಮರಾಠಿ, ಮಾರ್ವಾಡಿ ಮತ್ತು ಮಹಾಜನಿ ಭಾಷೆಗಳಲ್ಲಿವೆ ಮತ್ತು ಕರ್ನಾಟಕವನ್ನು ಆಳಿದ ಎಲ್ಲ ಪ್ರಮುಖ ಸಾಮ್ರಾಜ್ಯಗಳ ವಿಶೇಷತೆಯನ್ನು ತಿಳಿಸುತ್ತಾ ಜೈನ ಧರ್ಮದ ಆಶ್ರಯವು ಮಧ್ಯಯುಗದ ಇತಿಹಾಸದಲ್ಲಿ ಸಂಪೂರ್ಣ ಸಕ್ರಿಯವಾಗಿತ್ತು ಎಂಬ ಅಂಶದ ಮೇಲೆ ಬೆಳಕು ಚೆಲ್ಲುತ್ತದೆ. ೧೦೦೦ ಸಿಇ. ಸುತ್ತ, ಚೋಳರ ಕೈಯಲ್ಲಿ ತಮ್ಮ ಸಂಪೂರ್ಣ ಸೋಲು ಅನುಭವಿಸಿದ ಗಂಗಾ ವಂಶಾವಳಿಯ ಗಂಗಾವತಿ (ಕರ್ನಾಟಕ ದಕ್ಷಿಣ ಜಿಲ್ಲೆಗಳು) ಶಾಶ್ವತವಾಗಿ ಕಣ್ಮರೆಯಾದವು. ಅಲ್ಲಿಂದ ಮುಂದೆ ೧೩೩೪ ರವರೆಗೆ ಸಿಇ, ಹೊಯ್ಸಳರು ಈ ಪ್ರದೇಶದಲ್ಲಿ ಆಳ್ವಿಕೆಯನ್ನು ಸ್ಥಾಪಿಸಿದರು ಮತ್ತು ಅವರ ಅವಸಾನದ ನಂತರ, ವಿಜಯನಗರ ಸಾಮ್ರಾಜ್ಯವು ನಿಯಂತ್ರಣವನ್ನು ತೆಗೆದುಕೊಂಡಿತು. ವಿಜಯನಗರ ಸಾಮ್ರಾಜ್ಯದ ಅವನತಿಯ ನಂತರ, ಈ ಪ್ರದೇಶವು ಮೈಸೂರು ಸಾಮ್ರಾಜ್ಯದ ಆಳ್ವಿಕೆಗೆ ಒಳಪಟ್ಟಿತು. ಹೊಯ್ಸಳರ ಆಳ್ವಿಕೆಯ ಕಾಲದಲ್ಲಿ ಮಲ್ನಾಡು ಪ್ರದೇಶದ ಜಿಕ್ಕಮಗಳೂರು ಜಿಲ್ಲೆಯ ಅಂಗಡಿ ಎಂಬ ಸ್ಥಳದ ಮೂಲದ ಒಂದು ಗುಡ್ಡಗಾಡು ಜನಾಂಗವು ಪ್ರಬಲ ಸಾಮ್ರಾಜ್ಯವನ್ನು ನಿರ್ಮಿಸಿತ್ತು. ಈ ಗುಡ್ಡಗಾಡು ಜನರ ಆಳ್ವಿಕೆಯ ಕಾಲದಲ್ಲಿಯೇ ಹಾಸನ ತನ್ನ ಖ್ಯಾತಿಯ ಉತ್ತುಂಗ ತಲುಪಿತ್ತು. ಈಗಲೂ ಸುಮಾರು ಐವತ್ತು ಅಥವಾ ಹೆಚ್ಚು ಹೊಯ್ಸಳ ದೇವಾಲಯಗಳು ಉದ್ದಗ್ಗಲಕ್ಕೂ ಹರಡಿರುವುದನ್ನು ಕಾಣಬಹುದಾಗಿದೆ. ಈ ದೇವಾಲಯಗಳಲ್ಲಿರುವ ಅನೇಕ ಶಾಸನಗಳು ಕಳೆದುಹೋದ ಕಾಲದ ಒಂದು ವೈಭವದ ವಿವರಣೆಯನ್ನು ಸಂಪುಟಗಳಷ್ಟು ತಿಳಿಸುತ್ತವೆ. ಹೊಯ್ಸಳರ ಆಡಳಿತದ ವಿವರಣೆ, ಭೂ ಸುಧಾರಣೆ, ತೆರಿಗೆ, ಸಂಸ್ಕೃತಿ ಎಂದು ಅನೇಕ ವಿಷಯಗಳ ಸಂಪೂರ್ಣ ಮಾಹಿತಿಯನ್ನು ನೀಡುತ್ತವೆ. ಕುರುಬ / ಯಾದವ ಜನಾಂಗಕ್ಕೆ ಸೇರಿದವರೆಂದು ಗುರುತಿಸಲ್ಪಡುವ ಹೊಯ್ಸಳರು, ತಮ್ಮ ಪೂರ್ವಜರಾದ ಗಂಗರ ಜೊತೆ ಸೇರಿದರು. ಇವರು ಈ ಮೊದಲು ಸುಮಾರು ೧೦೦೦ - ೧೧೫೦ ಸಿಇ ಕಾಲದಲ್ಲಿ ಕಲ್ಯಾಣಿಯ ಚಾಲುಕ್ಯರ ಅಧೀನರಾಗಿದ್ದರು. ಕಲ್ಯಾಣಿಯ ಚಾಲುಕ್ಯರ ಅವನತಿಯ ನಂತರ ಹಾಗೂ ಹೊಯ್ಸಳರಿಗೆ ಅಧೀನರಾಗಿದ್ದ ಸಾಮಂತರ ಬಿಡುಗಡೆಗಾಗಿ ವಿಷ್ಣುವರ್ಧನನ ನಿರಂತರ ಹೋರಾಟದ ಫಲವಾಗಿ ಹೊಯ್ಸಳರು "ಸ್ವತಂತ್ರ" ಆಳ್ವಿಕೆಯನ್ನು ೧೨ನೆಯ ಶತಮಾನದಲ್ಲಿ ಪಡೆದರು. ಬಿಟ್ಟಿದೇವನೆಂದು ಕರೆಯಲ್ಪಡುತ್ತಿದ್ದ ವಿಷ್ಣುವರ್ಧನ ಮೂಲತಃ ಜೈನ ಧರ್ಮ ಪಾಲಿಸುತ್ತಿದ್ದವನು. ಆದರೆ ಮುಂದೆ ಹಿಂದೂ ಧರ್ಮದ ಒಂದು ಪಂಥವಾದ "ವೈಷ್ಣವ" ಸಿದ್ಧಾಂತವನ್ನು ಸ್ವೀಕರಿಸಿದ್ದರಿಂದ ತನ್ನ ಹೆಸರನ್ನು "ವಿಷ್ಣುವರ್ಧನ" ಎಂದ ಬದಲಾಯಿಸಿಕೊಂಡನು. ಅನೇಕ ಇತಿಹಾಸಕಾರರು ವಿಷ್ಣುವರ್ಧನ ಹೊಯ್ಸಳ ಸಾಮ್ರಾಜ್ಯದ ನಿಜವಾದ ಸ್ಥಾಪಕ ಎಂದು ಭಾವಿಸುತ್ತಾರೆ. ಹೊಯ್ಸಳರು ತಮ್ಮ ಪರಮಾಧಿಕಾರದ ಹೊರಹೊಮ್ಮುವಿಕೆ ಎರಡು ನಿರ್ಣಾಯಕ ವಿಜಯಗಳ ಮೂಲಕ ಸಾಧಿಸಿದರು. ಇದರಲ್ಲಿ ಒಂದು ೧೧೧೪ CE ರಲ್ಲಿ ತಲಕಾಡಿನಲ್ಲಿ ಚೋಳರ ವಿರುದ್ಧ ಗಳಿಸಿದ ಜಯ. ಈ ವಿಜಯದ ನಂತರ ವಿಷ್ಣುವರ್ಧನ "ವೀರ ಗಂಗಾ" ಮತ್ತು "ತಲಕಾಡು ಗೊಂಡಾ" ಎಂಬ ಬಿರುದುಗಳನ್ನು ಪಡೆದುಕೊಂಡ. ವಿಜಯದ ಸ್ಮರಣಾರ್ಥವಾಗಿ ನಾಣ್ಯಗಳನ್ನು ಬಿಡುಗಡೆ ಮಾಡಿದ, ತಲಕಾಡಿನಲ್ಲಿ ಕೀರ್ತಿ ನಾರಾಯಣ ದೇವಾಲಯ ಮತ್ತು ಬೇಲೂರಿನಲ್ಲಿ ಪ್ರಸಿದ್ಧ ಚನ್ನಕೇಶವ ದೇವಾಲಯಗಳನ್ನು ನಿರ್ಮಿಸಿದ ಮತ್ತು ಗಂಗಾವತಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡನು. ಎರಡನೆಯ ವಿಜಯ ೧೧೧೮ ಸಿಇ ಕನ್ನೇಗಾಲದಲ್ಲಿ ಬಲಿಷ್ಠರಾದ ಚಾಲುಕ್ಯ ರಾಜ ಆರನೇ ವಿಕ್ರಮಾದಿತ್ಯನ ವಿರುದ್ಧ ಪಡೆದ ರೋಚಕ ಗೆಲುವು. ಆದರೆ ವಿಷ್ಣುವರ್ಧನ ಇಂದಿನ ಹಾನಗಲ್ ಕರ್ನಾಟಕ, ಉಚ್ಛಂಗಿ, ಬನವಾಸಿ ಮತ್ತು ಬರ್ಕಾಪುರ ಕೇಂದ್ರ ಪ್ರದೇಶಗಳ ಮೇಲೆ ನಿಯಂತ್ರಣ ಪಡೆಯಲು ಸಾಧ್ಯವಾದದ್ದು ಮಾತ್ರ ಆರನೇ ವಿಕ್ರಮಾದಿತ್ಯನ ನಿಧನದ ನಂತರವೇ. ಹೊಯ್ಸಳರು ಮೊಮ್ಮಗ, ಎರಡನೇ ವೀರ ಬಲ್ಲಾಳನ ಆಳ್ವಿಕೆಯ ಕಾಲ ೧೧೭೩-೧೨೨೦ CE ದಲ್ಲಿ "ಚೋಳರಾಜ್ಯ ಪ್ರತಿಷ್ಠಾಚಾರ್ಯ" ಅಥವಾ "ಚೋಳ ಸಾಮ್ರಾಜ್ಯದ ರಕ್ಷಕ" ಎಂಬ ಶೀರ್ಷಿಕೆಯನ್ನು ಗಳಿಸಿದರು ಮತ್ತು ದಕ್ಷಿಣ ಭಾರತದಲ್ಲಿ ಸಮರ್ಥರಾದ ಒಂದು ನಿಜವಾದ ಪಡೆ ಎನಿಸಿಕೊಂಡರು. ಇದೇ ಕಾಲಘಟ್ಟದಲ್ಲಿ, ಹಾಸನ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಅಧಿಕೇಂದ್ರ ಆಯಿತು. ಹೆಸರಿನ ಬಗ್ಗೆ ಹಾಸನ ಹೆಸರಿನ ಹಿಂದೆ ಎರಡು ಬೇರೆ-ಬೇರೆ ವಾಡಿಕೆಗಳು ಇವೆ: ಮೊದಲಿನ ಹೆಸರು ಸಿಂಹಾಸನಪುರಿ ಇಂದ ಬಂದಿದೆ ಎಂದು, ಎರಡನೆಯದು ಹಾಸನ ನಗರದಲ್ಲಿ ನೆಲೆಸಿರುವ ಹಾಸನಾಂಬೆ ದೇವಿಯ ಹೆಸರಿನಿಂದ ಬಂದಿದೆ ಎಂದು ಹೊಯ್ಸಳ ವಾಸ್ತುಶಿಲ್ಪ ಹೊಯ್ಸಳರ ಅಮರತ್ವ ಕನ್ನಡ ಸಂಸ್ಕೃತಿ, ಕನ್ನಡ ಸಾಹಿತ್ಯ ಮತ್ತು vesara ವಾಸ್ತುಶಿಲ್ಪದ ತಮ್ಮದೇ ಆದ ಅನನ್ಯ ಶೈಲಿಯನ್ನು ತಮ್ಮ ಕೊಡುಗೆ ಕಾಣಿಸಿಕೊಳ್ಳುವ ಹೇಳಿಕೊಳ್ಳುತ್ತಾರೆ. ಉದಾಹರಣೆಗೆ ಹೆನ್ರಿ Cousens ಮತ್ತು ಜೇಮ್ಸ್ Furgusson ಎಂದು ಇತಿಹಾಸಕಾರರು ವಾಸ್ತುಶಿಲ್ಪದ ಹೊಯ್ಸಳ ಶೈಲಿಯ ಮೂಲಭೂತವಾಗಿ ಕಲ್ಯಾಣಿ ಚಾಲುಕ್ಯರು ಅಧಿಕವಾಗುವುದು ಬಾದಾಮಿ ಚಾಲುಕ್ಯರು ಮತ್ತು ಮತ್ತಷ್ಟು ಆರಂಭಿಸಿತು vesara ಶೈಲಿಯ ವಿಸ್ತರಣೆ ಮತ್ತು ಪರಾಕಾಷ್ಠೆ ಗಮನಿಸಿದ್ದಾರೆ. ವಾಸ್ತವವಾಗಿ, ಕೆತ್ತಿದ ಬಾಗಿಲು, ಲೇಥ್ ಕಂಬಗಳು ತಿರುಗಿ ಹೊಯ್ಸಳರ ಆಗಾಗ್ಗೆ ಬಳಸಲಾಗುತ್ತದೆ ಚುಚ್ಚಿದ ಕಿಟಕಿ ಪರದೆಗಳು ಸಾಮಾನ್ಯವಾಗಿ ಉತ್ತರ ಮತ್ತು ಮಧ್ಯ ಕರ್ನಾಟಕದ ಹಿಂದಿನ ಕಲ್ಯಾಣಿ ಚಾಲುಕ್ಯರ ದೇವಾಲಯಗಳಲ್ಲಿ ಕಾಣಬಹುದು. ಅನೇಕ ಹೊಯ್ಸಳ ದೇವಾಲಯಗಳು ನಿರ್ಮಿಸಲಾಯಿತು ಮೇಲೆ ಸ್ಟಾರ್ ಆಕಾರದ ವೇದಿಕೆ, Jagati, ಗೋಡೆಗಳ ZIG-ಅಂಕುಡೊಂಕು ಅಕ್ಷರ ಮತ್ತು ಬೂದು ಸೋಪ್ ಸ್ಟೋನ್ (chloritic ಪದರ) ಮೇಲೆ ಶಿಲ್ಪ ಸಾಂದ್ರತೆಯು ಆದರೆ ಹೊಯ್ಸಳ ವಾಸ್ತುಶಿಲ್ಪದ ಒಂದು ಅನನ್ಯ ಲಕ್ಷಣಗಳನ್ನು ಹೊಂದಿದೆ. ಯಳೇಶಪುರದಲ್ಲಿ ೫ ಶಾಸನಗಳು ಇದೆ. ಕನ್ನಡ ಕೊಡುಗೆ ಹಾಸನ ಜಿಲ್ಲೆಯುಹಲ್ಮಿಡಿ ಕನ್ನಡ ಇತಿಹಾಸದಲ್ಲಿ ಒಂದು ವಿಶೇಷ ಸ್ಥಾನವನ್ನು ಹೊಂದಿದೆ ಬೇಲೂರು ತಾಲ್ಲೂಕಿನ ಒಂದು ಸಣ್ಣ ಗ್ರಾಮ ೪೫೦ CE ರ ಕನ್ನಡ ಲಿಪಿಯಲ್ಲಿ ಹಳೆಯ ಕನ್ನಡ ಭಾಷೆ ಶಾಸನ ನೆಲೆಯಾಗಿದೆ. ಇದರ ದಿನಾಂಕ ಶಾಸನ ಕೆಲವೊಮ್ಮೆ ೪೨೫ ಸಿಇ ಇರಬಹುದೆಂದು ಚರ್ಚೆಯಲ್ಲಿದೆ. ರಾಜ ಕಾಕುತ್ಸ ವರ್ಮನು, ಕದಂಬ ರಾಜಮನೆತನದ ಸಂಸ್ಥಾಪಕ ರಾಜ ಮಯೂರಶರ್ಮನ ಮೊಮ್ಮಗ ಎನ್ನಲಾಗಿದೆ. ತಾಲ್ಲೂಕುಗಳು ಹಾಸನ ಜಿಲ್ಲೆಯನ್ನು ಎ೦ಟು ತಾಲೂಕುಗಳಾಗಿ ವಿಂಗಡಿಸಲಾಗಿದೆ: ಹಾಸನ ಅರಸೀಕೆರೆ ಚನ್ನರಾಯಪಟ್ಟಣ ಹೊಳೇನರಸೀಪುರ ಅರಕಲಗೂಡು ಬೇಲೂರು ಸಕಲೇಶಪುರ ಆಲೂರು ಭೌಗೋಳಿಕ ವಿವರಗಳು ೧೨ ° ೧೩ 'ಮತ್ತು ೧೩ ° ೩೩' ಉತ್ತರ ಅಕ್ಷಾಂಶ ಮತ್ತು ೭೫ ° ೩೩ ನಡುವೆ ಇರುವ 'ಮತ್ತು ೭೬ ° ೩೮' ಪೂರ್ವ ರೇಖಾಂಶದ, ಹಾಸನ ಜಿಲ್ಲೆಯ ೬೮೨೬,೧೫ km ² ನಷ್ಟು ವಿಸ್ತೀರ್ಣ. ಇದು ೮ ತಾಲ್ಲೂಕುಗಳಲ್ಲಿ, ೩೮ hoblies ಮತ್ತು ೨೩೬೯ ಹಳ್ಳಿಗಳನ್ನು ವಿಂಗಡಿಸಲಾಗಿದೆ. ಭೌಗೋಳಿಕ Bisle ಘಾಟ್ ಮತ್ತು ಉತ್ತರ, ದಕ್ಷಿಣ ಮತ್ತು ಪೂರ್ವದ ಮೈದಾನ್ ಅಥವಾ planis ಪ್ರದೇಶಗಳು ಎಂದು ಪಶ್ಚಿಮ ಮತ್ತು ದಕ್ಷಿಣ ಪಶ್ಚಿಮ malnad ಅಥವಾ ಪರ್ವತ ಪ್ರದೇಶದ ಬೆರೆಸಲಾಗುತ್ತದೆ. ಜಿಲ್ಲೆಯ ಕೇಂದ್ರ ಭಾಗದಲ್ಲಿ ಕೆಳದರ್ಜೆಗೆ ಅರಣ್ಯ ವ್ಯಾಪ್ತಿಯ ಕೆಲವು ಅಂಶಗಳಿವೆ. ಹಾಸನ ಜಿಲ್ಲೆಯ ಮಟ್ಟಕ್ಕೆ ಇದು ಆಗ್ನೇಯ Hampapura ಹತ್ತಿರ ಕಾವೇರಿ ನದಿಯ ಹಾಸಿಗೆ ಕಡೆಗೆ ಪಶ್ಚಿಮ ಘಟ್ಟ ವ್ಯಾಪ್ತಿಯ ನಿಂದ ಹೇಮಾವತಿ ನದಿಯ ಕೋರ್ಸ್ ಇಳಿಜಾರುಗಳು ಹೊಂದಿದೆ. ಅದರ ಮುಖ್ಯ ಉಪನದಿ ಗೊರೂರು ಬಳಿ ಇದು ಸೇರುತ್ತದೆ ಇದು ಬೇಲೂರು taluq ರಿಂದ Yagachi ಹೊಂದಿದೆ. ಹೇಮಾವತಿ ಒಂದು ದಕ್ಷಿಣದ Holenarsipur taluq ಹಾದುಹೋಗುತ್ತದೆ ಮತ್ತು ಹಾಸನ ಜಿಲ್ಲೆಯ ಗಡಿಗೆ Hampapura ನಿಕಟ ಬಳಿ ಕಾವೇರಿ ನದಿ ಸೇರುತ್ತದೆ. ಹಾಸನ ಮತ್ತು ಬೇಲೂರು ೩.೦೮೪ ಮತ್ತು ಸುಮಾರು ನಿಂತಿದೆ ಸಮುದ್ರ ಮಟ್ಟಕ್ಕಿಂತ ಕ್ರಮವಾಗಿ. ಜಿಲ್ಲೆಯ ಉತ್ತರ ಪಶ್ಚಿಮಕ್ಕೆ ಚಿಕ್ಕಮಗಳೂರು ಜಿಲ್ಲೆ, ಉತ್ತರದಲ್ಲಿ ಚಿತ್ರದುರ್ಗ ಜಿಲ್ಲೆ, ಪೂರ್ವಕ್ಕೆ ತುಮಕೂರು ಜಿಲ್ಲೆ, ದಕ್ಷಿಣಕ್ಕೆ ದಕ್ಷಿಣ ಪೂರ್ವಕ್ಕೆ ಮಂಡ್ಯ ಜಿಲ್ಲೆ, ಮೈಸೂರು, ನೈಋತ್ಯ ಮತ್ತು ಪಶ್ಚಿಮಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಕೊಡಗು ಜಿಲ್ಲಾ ಸುತ್ತುವರೆದಿದೆ. ಜನಸಂಖ್ಯಾ ವಿವರ ೨೦೧೧ ಜನಗಣತಿಯ ಹಾಸನ ಜಿಲ್ಲೆಯ ಪ್ರಕಾರ ೧.೭೭೬.೨೨೧ ಜನಸಂಖ್ಯೆಯನ್ನು ಹೊಂದಿದೆ, ಗ್ಯಾಂಬಿಯಾ ರಾಷ್ಟ್ರದ ಸ್ಥೂಲವಾಗಿ ಸಮಾನ ನೆಬ್ರಸ್ಕಾ ಅಥವಾ ಅಮೇರಿಕಾದ ರಾಜ್ಯ. ಇದು ಭಾರತದಲ್ಲಿ ೨೭೦th ಒಂದು ಶ್ರೇಯಾಂಕವನ್ನು (ಔಟ್ ೬೪೦ ಒಟ್ಟು ಆಫ್) ನೀಡುತ್ತದೆ. ಜಿಲ್ಲೆಯ ಜನಸಂಖ್ಯೆ ಸಾಂದ್ರತೆ ಹೊಂದಿದೆ . ದಶಕದ ೨೦೦೧-೨೦೧೧ ಮೇಲೆ ಇಲ್ಲಿನ ಜನಸಂಖ್ಯಾ ಬೆಳವಣಿಗೆ ದರವು ೩.೧೭% ಆಗಿತ್ತು. ಹಾಸನ ಪ್ರತಿ ೧೦೦೦ ಪುರುಷರಿಗೆ ೧೦೦೫ ಮಹಿಳೆಯರು ಲೈಂಗಿಕ ಅನುಪಾತವನ್ನು ಹೊಂದಿದೆ, ಮತ್ತು ೭೫,೮೯% ಸಾಕ್ಷರತಾ ಪ್ರಮಾಣ. ಕನ್ನಡ ಜಿಲ್ಲೆಯ ಜನರ ಬಹುಪಾಲು ಮಾತನಾಡುತ್ತಾರೆ. ಮಾಧ್ಯಮಗಳು ಆಕಾಶವಾಣಿ : ಹಾಸನದ ಸಾಲಗಾಮೆ ರಸ್ತೆಯಲ್ಲಿ ಆಕಾಶವಾಣಿ ಹಾಸನ ಕೇಂದ್ರವಿದೆ. ಇದು ಆರು ಕಿಲೋ ವ್ಯಾಟ್ ಸಾಮರ್ಥ್ಯದ ಎಫ್. ಎಮ್ ಪ್ರೇಷಕವನ್ನು ಹೊಂದಿದ್ದು, ಹಾಸನ ಜಿಲ್ಲೆಯೂ ಸೇರಿದಂತೆ ಪಕ್ಕದ ಜಿಲ್ಲೆಗಳಲ್ಲೂ ಇದರ ಪ್ರಸಾರವಿದೆ. ಸಾರಿಗೆ ವಾಯುಸಾರಿಗೆ ಹಾಸನದಲ್ಲಿನ ವಿಮಾನ ನಿಲ್ದಾಣವು ೨೦೨೨ ರಿಂದ ಕಾರ್ಯಾಚರಣೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ. ಈ ವ್ಯವಸ್ಥೆಯಿಂದ ವಾರ್ಷಿಕವಾಗಿ ೩ ದಶಲಕ್ಷ ಪ್ರಯಾಣಿಕರ ಪ್ರಯಾಣ ಸಾಮರ್ಥ್ಯ ಮತ್ತು ೧೦೦,೦೦೦ ಟನ್ ಸರಕು ಸಾಗಣೆ ಸಾಮರ್ಥ್ಯ ಹೊಂದುವ ನಿರೀಕ್ಷೆಯಿದೆ. ಈ ನಿಲ್ದಾಣವು ವಿಮಾನ ನಿರ್ವಹಣೆ ಮತ್ತು ಪರಿವರ್ತನೆ (AMM) ಹಬ್ ಹೊಂದಲಿದೆ. ರಸ್ತೆ ಸಾರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಸನವನ್ನು ರಾಜ್ಯದ ಇತರ ಭಾಗಳ ಜೊತೆಗೆ ದೇಶದ ಇತರೆ ಭಾಗಗಳಿಗೂ ಸಂಪರ್ಕಕಲ್ಪಿಸುತ್ತದೆ. ಹಾಸನವು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ ನಂ ೪೮ ದೇಶದ ಇತರೆ ಸ್ಥಳಗಳ ಜೊತೆ ಸಂಪರ್ಕ ಹೊಂದಿದೆ. ಹಾಸನದ ಕೆ ಎಸ ಆರ್ ಟಿ ಸಿ ಬಸ್ಸು ನಿಲ್ದಾಣವು ದೇಶದ ಎರಡನೆಯ ಅತಿ ದೊಡ್ಡ ನಿಲ್ದಾಣ ಎಂಬ ಕೀರ್ತಿಗೆ ಪಾತ್ರವಾಗಿದೆ. ರೈಲು ಸಾರಿಗೆ ಹಾಸನದ ರೈಲ್ವೆ ವ್ಯವಸ್ಥೆಯು ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯದ ಅಡಿಯಲ್ಲಿ ಬರುತ್ತದೆ. ಹಾಸನ ಸಿಟಿ ರೈಲು ನಿಲ್ದಾಣವು ಭಾರತೀಯ ರೈಲ್ವೆಯ ಮೂಲಕ ದೇಶದ ಉಳಿದ ಭಾಗಗಳ ಜೊತೆ ಸಂಪರ್ಕ ಹೊಂದಿದೆ. ಹಾಸನವು ರೇಲ್ವೆಯ ಮೂಲಕ ಕರ್ನಾಟಕದ ಬಹುತೇಕ ಸ್ಥಳಗಳು ಹಾಗು ಮೂಲಕ ದೇಶದ ಉಳಿದ ಭಾಗಗಳ ಜೊತೆ ಸಂಪರ್ಕ ಹೊಂದಿದೆ. ಹಾಸನವು ರೇಲ್ವೆಯ ಮೂಲಕ ಕರ್ನಾಟಕದ ಬಹುತೇಕ ಸ್ಥಳಗಳು ಹಾಗು ಮುಂಬಯಿ ನಂಥ ಇತರ ಪ್ರಮುಖ ನಗರಗಳಿಗೆ ರೈಲು ಸಂಪರ್ಕ ಹೊಂದಿದೆ. ಸಂಸ್ಕೃತಿ ಹಾಸನ ಜಿಲ್ಲೆಯ ಸಂಸ್ಕೃತಿಯು ಈ ಪ್ರದೇಶವನ್ನು ಆಳಿದ ಹೊಯ್ಸಳ ಮತ್ತು ಗಂಗ ಸಾಮ್ರಾಜ್ಯದ ದೊರೆಗಳ ಪ್ರಭಾವದೊಂದಿಗೆ ಬೆಸೆದುಕೊಂಡಿದೆ. ಆರಂಭದಲ್ಲಿ ಗಂಗರು ಹಿಂದೂಗಳಾಗಿದ್ದರು. ಆದರೆ ೭೮೫ ರ ವೇಳೆಗೆ ರಾಜನಾಗಿದ್ದ ಎರಡನೆಯ ಶಿವಮಾರ ಜೈನ ಧರ್ಮವನ್ನು ಸ್ವೀಕರಿಸಿದನು. ಹೊಯ್ಸಳರು ಜೈನರಾಗಿದ್ದರು. ಹೊಯ್ಸಳ ವಂಶದ ಸ್ಥಾಪಕ ಸಳ ಎಂಬ ಪೌರಾಣಿಕ ವ್ಯಕ್ತಿ ಕೂಡ ಜೈನ ಸನ್ಯಾಸಿ ಸುದತ್ತ ಮುನಿಯ ಆಶೀರ್ವಾದ ಹೊಂದಿದ್ದನು ಎಂದು ಹೇಳಲಾಗುತ್ತದೆ. ಇಲ್ಲಿನ ಅನೇಕ ಯಶಸ್ವಿ ಆಡಳಿತಗಾರರಲ್ಲಿ ಕೆಲವರು ಜೈನರು ಇದ್ದರು. ೧೨ನೆಯ ಶತಮಾನದ ಆರಂಭದಲ್ಲಿ ರಾಮಾನುಜಾಚಾರ್ಯರು ಚೋಳರ ಕಿರುಕುಳದಿಂದ ತಪ್ಪಿಸಿಕೊಳ್ಳಲು ಈ ಪ್ರದೇಶಕ್ಕೆ ಬಂದರು. ಈ ಸಮಯದಲ್ಲಿ ಪ್ರಖ್ಯಾತ ದೊರೆ ವಿಷ್ಣುವರ್ಧನನು ರಾಮಾನುಜಾಚಾರ್ಯರ ಪ್ರಭಾವಕ್ಕೆ ಒಳಗಾಗಿ ಹಿಂದು ಧರ್ಮಕ್ಕೆ ಮರಳಿದನು. ಆದರೆ ಆತನ ಪತ್ನಿ ಶಾಂತಲ ದೇವಿಯು ಜೈನ ಧರ್ಮದಲ್ಲಿಯೇ ಮುಂದುವರೆದಳು. ಇದು ಧಾರ್ಮಿಕ ಸೌರ್ಹದಕ್ಕೊಂದು ಉತ್ತಮ ಉದಾಹರಣೆಯಾಗಿದೆ. . ಪತ್ನಿ ಶಾಂತಲಾದೇವಿ ಧಾರ್ಮಿಕ ಸಹಿಷ್ಣುತೆಯನ್ನು ಉದಾಹರಣೆ ಹೊಂದಿಸುವ, ಜೈನ್ ಧರ್ಮ ಅನುಸರಿಸಿ ಮುಂದುವರೆಸತೊಡಗಿದರು ಈ ಸಮಯದಲ್ಲಿ ವಿಷ್ಣುವರ್ಧನ, ರಾಮಾನುಜಾಚಾರ್ಯರು ಮತ್ತು ಪೂರ್ವನಿರ್ಧಾರಿತ ಹಿಂದೂ ಧರ್ಮ ಪ್ರಭಾವಿತರಾಗಿದ್ದರು. ಬೇಲೂರಿನಲ್ಲಿ ಪ್ರಸಿದ್ಧ ಚನ್ನಕೇಶವ ದೇವಸ್ಥಾನದ ಹತ್ತಿರದ ಚನ್ನಿಗರಾಯ ದೇವಾಲಯವನ್ನು ಕಟ್ಟಬೇಕೆಂದು ನಿರ್ಧರಿಸಿದವಳು ಶಾಂತಲಾದೇವಿ. ಈ ಸೌಹಾರ್ದವು ಇಂದಿಗೂ ಜೀವಂತವಾಗಿದೆ. ಜಿಲ್ಲಾ ಆಡಳಿತ ಮತ್ತು ಸಾಮಾನ್ಯ ಜನತೆಯ ಈ ಸೌಹಾರ್ದವನ್ನು , ಮಹಾಮಸ್ತಿಕಾಭಿಷೇಕ ಸಂದರ್ಭಗಳಲ್ಲಿ ಕಾಣಬಹುದು.ಬಹುತೇಕ ಹೊಯ್ಸಳ ಸ್ಮಾರಕಗಳು ೧೧ ರಿಂದ ೧೩ ನೆಯ ಶತಮಾನದಲ್ಲಿ ನಿರ್ಮಾಣವಾದವು. ಶ್ರವಣಬೆಳಗೊಳದಲ್ಲಿನ ಜೈನ ಸ್ಮಾರಕಗಳು ಗಂಗರ ಸಾಮ್ರಾಜ್ಯದ ಸಂದರ್ಭದಲ್ಲಿ ೩೫೦ ರಿಂದ ೯೯೯ ರ ನಡುವೆ ನಿರ್ಮಾಣವಾದುವು. ಇದು ಭಾರತದ ಪ್ರಮುಖ ಜೈನ ತೀರ್ಥಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಇಂದು, ಹಾಸನ ಮೈಸೂರು ಅರಮನೆ ಮತ್ತು ವಸಾಹತು ಕಟ್ಟಡಗಳನ್ನು ಹೊರತುಪಡಿಸಿ ಹೊಯ್ಸಳರ ನಿರ್ಮಿಸಿದ ಅಂದವಾದ vesara ಸ್ಮಾರಕಗಳು ಬದಲಾಯಿಸಲಾಗಿದೆ, ಮೈಸೂರು ಜಿಲ್ಲೆಯ ಎಂದು ಹೋಲುವಂತಿತ್ತು ಒಂದು ಚಾರ್ಮ್ ಬಹುಮಟ್ಟಿಗೆ ಕೃಷಿಕ ಸಮುದಾಯ. ಒಂದು ಪಟ್ಟಿಯಲ್ಲಿ ಮುಂದಿನ ಸ್ಮಾರಕ ಭೇಟಿ ಕೆಲವು ಕಿಲೋಮೀಟರ್ ಹೆಚ್ಚು ಪ್ರಯಾಣ ಹೊಂದಿಲ್ಲ. ಅದರ ತಿನಿಸು ಮಿಡಿಗಾಯಿ (ಸಣ್ಣ ಕಚ್ಚಾ ಮಾವು) ಸಂಡಿಗೆ,' ' ಅವಲಕ್ಕಿ (ಸಿಪ್ಪೆ ಸುಲಿಸಲ್ಪಟ್ಟ ಅಕ್ಕಿ), ಕಡಬು (ಕಡಬು ವಿವಿಧ ಅಕ್ಕಿ ಮತ್ತು ಧಾನ್ಯಗಳಿಂದ ತಯಾರಿಸಲಾಗುತ್ತದೆ) ಮತ್ತು ಥಾಲಿಪಿಟ್ಟು' ' ಅಕ್ಕಿರೊಟ್ಟಿ' (ಅಕ್ಕಿ ಹಿಟ್ಟಿನಿಂದ ಮಾಡಿದ) ಉಪ್ಪಿನಕಾಯಿ ಮುಂತಾದ ರುಚಿಕರ ವೈವಿಧ್ಯತೆಗಳ ಪರಿಣಾಮವಾಗಿ ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಒಂದು ಮಿಶ್ರಣವಾಗಿದೆ. ಒಟ್ಟು ಜನಸಂಖ್ಯೆಯ ೫% ರಷ್ಟು ಮುಸ್ಲಿಮರು. ಹೆಬ್ಬಾರ್ ಒಂದು ಸಮುದಾಯ ಹೆಚ್ಚಿನ ಒಂದು ಸಾವಿರ ವರ್ಷಗಳ ಕಾಲ ಈ ಪ್ರದೇಶದಲ್ಲಿ ನೆಲೆಗೊಂಡಿದ್ದ ಒಂದು ಪ್ರಾಚೀನ ಬ್ರಾಹ್ಮಣ ಸಮುದಾಯ ಅಯ್ಯಂಗಾರಿಗಳು. Shantigrama ಶಾಸನಗಳ ಸಂಸ್ಥಾಪಕ ಕಾಶಿ ಒಂದು ಬ್ರಾಹ್ಮಣ ಎಂದು ಸೂಚಿಸುತ್ತದೆ. ಹಾಸನ ಅಯ್ಯಂಗಾರಿಗಳು, ಬೇರೆ ಬ್ರಾಹ್ಮಣ ಸಮುದಾಯ ಇತ್ಯಾದಿ ಅಯ್ಯಂಗಾರ್ ಬೇಕರಿಗಳಲ್ಲಿ ಕರ್ನಾಟಕ ಹೆಚ್ಚಿನ ಪಟ್ಟಣಗಳು ​​ಮತ್ತು ನಗರಗಳ ಸಾಮಾನ್ಯ ಲಕ್ಷಣವಾಗಿದೆ ಕೇಕ್, ಹಲ್ಲೆಗಳು, ಬಿಸ್ಕೆಟ್ ಮತ್ತು ಬ್ರೆಡ್ ತನ್ನ ಟೇಸ್ಟಿ ವ್ಯಂಜನವಾಗಿ ಸಿದ್ಧತೆಗಳನ್ನು ಎಲ್ಲಾ ದಕ್ಷಿಣ ಕರ್ನಾಟಕ ಮೇಲೆ ಕರೆಯಲಾಗುತ್ತದೆ. ಹಾಸನ್ ಕೂಡ ಬಡವರ ಊಟಿ ಎಂದು ಕರೆಯಲಾಗುತ್ತದೆ. ಅದರ Bisle ಘಾಟ್ ಪ್ರದೇಶದಲ್ಲಿ ಕ್ಷಿಪ್ರ ಮತ್ತು ವ್ಯಾಪಕ ವ್ಯಾಪಾರೀಕರಣ ಇಲ್ಲದೆ ತಮಿಳುನಾಡಿನ ನೀಲಗಿರಿ'' ಜಿಲ್ಲೆಯ ಅದೇ ಪ್ರಾಕೃತಿಕ ಸೌಂದರ್ಯವನ್ನು ಹೊಂದಿದೆ. ಹಾಸನ ಕನ್ನಡ ಸಾಹಿತ್ಯ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಮುಂತಾದ ಪ್ರಸಿದ್ಧ ವ್ಯಕ್ತಿಗಳನ್ನು ಕಂಡುಕೊಳ್ಳುತ್ತದೆ ಒಂದು ಸ್ಥಳವಾಗಿದೆ. ಶಿಕ್ಷಣ ಜಿಲ್ಲೆಯಲ್ಲಿ ಶಾಲಾಶಿಕ್ಷಣ, ಪದವಿ-ಸ್ನಾತಕೋತ್ತರ ಪದವಿ ಮತ್ತು ತಾಂತ್ರಿಕ ಶಿಕ್ಷಣ ನೀಡುವ ಸರಕಾರಿ, ಸ್ವಾಯತ್ತ ಮತ್ತು ಖಾಸಗಿ ಶಾಲಕಾಲೇಜುಗಳಿವೆ. ಉಲ್ಲೇಖಗಳು ಡಾ ಸೂರ್ಯನಾಥ ಯು. ಕಾಮತ್ (೨೦೦೧). ಪೂರ್ವ ಐತಿಹಾಸಿಕ ಕಾಲದಿಂದ ಇಂದಿನ ಕರ್ನಾಟಕದ ಎ ಕನ್ಸೈಸ್ ಹಿಸ್ಟರಿ, ಗುರು ಪುಸ್ತಕಗಳು, ಎಂಸಿಸಿ, ಬೆಂಗಳೂರು (೨೦೦೨ ಮರುಮುದ್ರಣ), OCLC: ೭೭೯೬೦೪೧ ಬಾಹ್ಯ ಕೊಂಡಿಗಳು‌‌ ಪ್ರಕಾಶಮಾನವಾದ ಚನ್ನರಾಯಪಟ್ಟಣ ಹಾಸನ ಇತಿಹಾಸ ಶ್ರವಣಬೆಳಗೊಳ ಇತಿಹಾಸ ಹಾಸನ ವಿಮಾನ ನಿಲ್ದಾಣ ಕರ್ನಾಟಕದ ಇತಿಹಾಸ , ಅರ್ತಿಕಜೆ ಹೊಯ್ಸಳ ಪ್ರವಾಸೋದ್ಯಮ ಭಾರತದ ಜನಗಣತಿ ಹಾಸನದ ರಕ್ಷಿತ ಸ್ಮಾರಕಗಳು ಶ್ರವಣಬೆಳಗೊಳದ ಸುತ್ತಮುತ್ತ ದೇವಾಲಯಗಳ ಗತ ವೈಭವ ಹಾಸನ ಜಿಲ್ಲೆಯ ಬಿಸಲೆ ಪ್ರದೇಶದ ಕೆಲವು ಚಿತ್ರಗಳು ಶ್ರವಣಬೆಳಗೊಳ ಛಾಯಾಚಿತ್ರಗಳು ಕರ್ನಾಟಕದ ಜಿಲ್ಲೆಗಳು ಹಾಸನ ಜಿಲ್ಲೆ
1024
https://kn.wikipedia.org/wiki/%E0%B2%95%E0%B2%B0%E0%B3%8D%E0%B2%A8%E0%B2%BE%E0%B2%9F%E0%B2%95%E0%B2%A6%20%E0%B2%9C%E0%B2%BF%E0%B2%B2%E0%B3%8D%E0%B2%B2%E0%B3%86%E0%B2%97%E0%B2%B3%E0%B3%81
ಕರ್ನಾಟಕದ ಜಿಲ್ಲೆಗಳು
ಹಿನ್ನೆಲೆ ನಮ್ಮ ಕರ್ನಾಟಕ ರಾಜ್ಯಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಬ್ರಿಟಿಷರ ಕಾಲದಲ್ಲಿ ಅವರ ಸುಗಮ ಆಡಳಿತದ ಕಾರಣಕ್ಕಾಗಿ ವಿವಿಧ ಜಿಲ್ಲೆಗಳನ್ನು ರಚಿಸಲಾಯಿತು. ಅನೇಕ ಸಂದರ್ಭಗಳಲ್ಲಿ ಜಿಲ್ಲಾ ಕೇಂದ್ರಗಳು ಬದಲಾಗಿವೆ. ಕೆಲವು ಜಿಲ್ಲೆಗಳು ಚಿಕ್ಕದಾಗಿದ್ದು, ಕೆಲವು ವಿಸ್ತಾರಗೊಂಡಿವೆ. ಕೆಲವೊಂದು ದೊಡ್ಡ ಜಿಲ್ಲೆಗಳನ್ನು ವಿಭಜಿಸಿ ಎರಡು ಜಿಲ್ಲೆಗಳನ್ನು ರಚಿಸಲಾಗಿದೆ. ಈ ಜಿಲ್ಲೆಗಳ ಆಡಳಿತವನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೋಡಿಕೊಳ್ಳುತ್ತಾರೆ. ನಮ್ಮ ರಾಜ್ಯ ಸರ್ಕಾರದ ಆಡಳಿತದ ಅನುಕೂಲಕ್ಕಾಗಿ ಇರುವ ಮೂವತ್ತೊಂದು ಜಿಲ್ಲೆಗಳು ನಾಲ್ಕು ಕಂದಾಯ ವಿಭಾಗಗಳ ಅಡಿಯಲ್ಲಿ ಬರುವಂತೆ ರೂಪಿಸಲಾಗಿದೆ, ಅವು ಈ ಕೆಳಗಿನಂತೆ ಇವೆ: 1. ಬೆಂಗಳೂರು ವಿಭಾಗ ಕರ್ನಾಟಕದ ರಾಜಧಾನಿ ಬೆಂಗಳೂರು ಆಗಿದೆ. ಇದು ಒಂದು ಆಡಳಿತ ಕಂದಾಯ ವಿಭಾಗವಾಗಿದೆ. ಈ ವಿಭಾಗದಲ್ಲಿ ಒಂಭತ್ತು ಜಿಲ್ಲೆಗಳಿವೆ. ಅವು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ. ನಮ್ಮ ರಾಜ್ಯದ ದಕ್ಷಿಣ ಭಾಗದಲ್ಲಿ ಇವು ನೆಲೆಗೊಂಡಿವೆ. 2. ಮೈಸೂರು ವಿಭಾಗ ನಮ್ಮ ರಾಜ್ಯದ ಮತ್ತೊಂದು ಆಡಳಿತ ವಿಭಾಗವೆಂದರೆ ಮೈಸೂರು ವಿಭಾಗ. ಮೈಸೂರು ಆರಂಭದಲ್ಲಿ ಒಡೆಯರ್ ವಂಶಸ್ಥರ ರಾಜಧಾನಿಯಾಗಿತ್ತು. ಈ ವಿಭಾಗದಲ್ಲಿರುವ ಎಂಟು ಜಿಲ್ಲೆಗಳೆಂದರೆ: ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ಕೊಡಗು. ಕರ್ನಾಟಕದ ಅನೇಕ ಶ್ರೀಮಂತ ಜಿಲ್ಲೆಗಳು ಈ ವಿಭಾಗದಲ್ಲಿವೆ. ಈ ವಿಭಾಗವು ನದಿಗಳಿಗೆ, ಪರ್ವತ ಶ್ರೇಣಿಗಳಿಗೆ, ಅರಣ್ಯಗಳಿಗೆ, ಕಾಡು ಪ್ರಾಣಿಗಳಿಗೆ, ಕಾಫಿ ತೋಟಗಳಿಗೆ, ಕರಾವಳಿಗೆ, ಬಂದರುಗಳಿಗೆ ಪ್ರಸಿದ್ಧವಾಗಿದೆ. 3. ಬೆಳಗಾವಿ ವಿಭಾಗ ಈ ವಿಭಾಗದ ನಾಲ್ಕು ಜಿಲ್ಲೆಗಳು 1956ರವರೆಗೆ ಬಾಂಬೆ ಪ್ರಾಂತ್ಯದಲ್ಲಿ ಇದ್ದವು. ನಂತರ ಕರ್ನಾಟಕ ರಾಜ್ಯದಲ್ಲಿ ಸೇರ್ಪಡೆಯಾದವು. ಈ ವಿಭಾಗದಲ್ಲಿ ಇರುವ ಜಿಲ್ಲೆಗಳೆಂದರೆ: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಾಗಲಕೋಟ ಮತ್ತು ಉತ್ತರ ಕನ್ನಡ. ಇವುಗಳಲ್ಲಿ ಉತ್ತರ ಕನ್ನಡ ಮತ್ತು ಬೆಳಗಾವಿ ಕರ್ನಾಟಕದ ಅತಿದೊಡ್ಡ ಜಿಲ್ಲೆಗಳಾಗಿವೆ. 4. ಕಲಬುರ್ಗಿ ವಿಭಾಗ ಕಲಬುರ್ಗಿ ವಿಭಾಗದಲ್ಲಿ ಇರುವ ಜಿಲ್ಲೆಗಳೆಂದರೆ: ಕಲಬುರ್ಗಿ, ಬೀದರ್, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಹೊಸದಾಗಿ ಉದಯವಾದ ವಿಜಯನಗರ. ದುರದೃಷ್ಟವಶಾತ್ ಈ ಜಿಲ್ಲೆಗಳು ಸಾಕ್ಷರತಾ ಪ್ರಮಾಣ, ತಲಾ ಆದಾಯ, ಕೃಷಿ, ಜೀವಿತಾವಧಿ ಮುಂತಾದ ವಿಷಯಗಳಲ್ಲಿ ಸಾಕಷ್ಟು ಹಿಂದುಳಿದಿವೆ. ಅದಕ್ಕಾಗಿ ಕರ್ನಾಟಕ ಸರ್ಕಾರವು 2000ರಲ್ಲಿ ಡಾ. ಡಿ. ಎಂ. ನಂಜುಂಡಪ್ಪ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದೆ. ತೀರಾ ಇತ್ತೀಚೆಗೆ ಭಾರತ ಸರ್ಕಾರ ಈ ಜಿಲ್ಲೆಗಳ ಅಭಿವೃದ್ಧಿಗಾಗಿ ಸಂವಿಧಾನದ 371 (ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ನೀಡಿದೆ. ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳ ಅಧಿಕೃತ ಪಟ್ಟಿ ಉಲ್ಲೇಖಗಳು ಕರ್ನಾಟಕದ ಜಿಲ್ಲೆಗಳು ಕರ್ನಾಟಕ ಭಾರತದ ಜಿಲ್ಲೆಗಳು
1026
https://kn.wikipedia.org/wiki/%E0%B2%A6%E0%B2%95%E0%B3%8D%E0%B2%B7%E0%B2%BF%E0%B2%A3%20%E0%B2%95%E0%B2%A8%E0%B3%8D%E0%B2%A8%E0%B2%A1
ದಕ್ಷಿಣ ಕನ್ನಡ
ದಕ್ಷಿಣ ಕನ್ನಡ (ತುಳು: ಕುಡ್ಲ) ಕರ್ನಾಟಕ ರಾಜ್ಯದ ಒಂದು ಕರಾವಳಿ ಜಿಲ್ಲೆ. ಈ ಜಿಲ್ಲೆಯ ಕೇಂದ್ರಸ್ಥಳ ಹಾಗೂ ಮುಖ್ಯ ನಗರ ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆಯ ಜನಸಂಖ್ಯೆ ೨೦,೮೯,೬೪೯ ಆಗಿದ್ದು ಇದರಲ್ಲಿ ಪುರುಷರು ೧೦,೩೪,೭೧೪ ಹಾಗೂ ಮಹಿಳೆಯರು ೧೦,೫೪,೯೩೫ (೨೦೧೧ರ ಜನಗಣತಿಯಂತೆ) . ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಳು ತಾಲ್ಲೂಕುಗಳಿವೆ. ಅವೆಂದರೆ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಬೆಳ್ತಂಗಡಿ, ಮೂಡಬಿದಿರೆ,ಹಾಗೂ ಕಡಬ. ಕೆಲವು ವರ್ಷಗಳ ಹಿಂದೆ ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳೂ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ್ದವು . ಆಗಸ್ಟ್ ೧೯೯೭ ರಲ್ಲಿ ಈ ತಾಲೂಕುಗಳನ್ನು ಉಡುಪಿ ಜಿಲ್ಲೆಯ ಭಾಗವಾಗಿ ಘೋಷಿಸಲಾಯಿತು. ಇತಿಹಾಸ ಹಿಂದೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಟ್ಟಾಗಿ ಕೆನರಾ '''(ಕನ್ನಡ'' ಶಬ್ದದ ಆಂಗ್ಲೀಕೃತ ರೂಪ) ಎಂದು ಕರೆಯಲಾಗುತ್ತಿತ್ತು. ೧೮೬೦ ರಲ್ಲಿ ಬ್ರಿಟಿಷರು ಈ ಭಾಗವನ್ನು ಉತ್ತರ ಕೆನರ(North Canara) ಮತ್ತು ದಕ್ಷಿಣ ಕೆನರ(South Canara)ಎಂದು ವಿಂಗಡಿಸಿದರು. ೧೮೬೨ ರಲ್ಲಿ ಉತ್ತರ ಕೆನರವನ್ನು ಬೋಂಬೆ ಪ್ರೆಸಿಡೆನ್ಸಿ ಹಾಗೂ ದಕ್ಷಿಣ ಕೆನರವನ್ನು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಸಲಾಯಿತು. ಕುಂದಾಪುರ ತಾಲೂಕು ಮೊದಲು ಉತ್ತರ ಕೆನರದಲ್ಲಿದ್ದರೂ ನಂತರ ದಕ್ಷಿಣ ಕೆನರಕ್ಕೆ ಸೇರಿಸಲಾಯಿತು.ಸ್ವಾತಂತ್ರ್ರ್ಯಾನಂತರ ಈ ಎರಡೂ ಜಿಲ್ಲೆಗಳು ದಕ್ಷಿಣ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾಗಿ ಬದಲಾದವು. ಸ್ವಾತಂತ್ರ್ಯದ ನಂತರ ಈ ಜಿಲ್ಲೆ ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡಿತ್ತು. ೧೯೫೬ರ ಪುನರ್ ವಿಂಗಡನೆ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ಮೈಸೂರು ರಾಜ್ಯಕ್ಕೆ ಹಾಗೂ ಕಾಸರಗೋಡು ಜಿಲ್ಲೆಯನ್ನು ಕೇರಳ ರಾಜ್ಯಕ್ಕೆ ಸೇರಿಸಲಾಯಿತು. ಕರ್ನಾಟಕ ಸರ್ಕಾರ ಆಗಸ್ಟ್ ೧೯೯೭ರಲ್ಲಿ, ಆಡಳಿತ ದೃಷ್ಟಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯಾಗಿ ವಿಂಗಡಿಸಿತು. ಜನ ನಂಬುಗೆಯಂತೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಪಶ್ಚಿಮ ಘಟ್ಟದಿಂದ ಕರಾವಳಿವರೆಗಿನ ’ಪರಶುರಾಮ ಸೃಷ್ಟಿ’ಯ ಭಾಗವಾಗಿದೆ. ಈ ನಂಬುಗೆಯಂತೆ, ಕ್ಷತ್ರಿಯರನ್ನು ಭೂಲೋಕದಿಂದ ನಿರ್ಮೂಲನ ಮಾಡುವ ಪ್ರತಿಜ್ಙೆ ಕೈಗೊಂಡ ಪರಶುರಾಮನು ಭೂಮಿಯನ್ನು ೨೧ ಬಾರಿ ಸುತ್ತಿ ಸಕಲ ಕ್ಷತ್ರಿಯರನ್ನೂ ನಿರ್ಮೂಲನ ಮಾಡಿದ ನಂತರ ತಾನು ನೆಲೆಸಲು ಕ್ಷತ್ರಿಯರು ಕಾಲಿಡದ ಜಾಗವೊಂದನ್ನು ಸೃಷ್ಟಿಸಬಯಸುತ್ತಾನೆ. ಅದರಂತೆ ಪಶ್ಚಿಮ ಘಟ್ಟದ ಶಿಖರವೊಂದರ ಮೇಲೆ ನಿಂತು ರಕ್ತದಿಂದ ಮಲಿನವಾದ ತನ್ನ ಕೊಡಲಿ(ಪರಶು)ಯನ್ನು ಸಮುದ್ರದೆಡೆಗೆ ಎಸೆಯಲು ಸಮುದ್ರ ರಾಜನು ಕೊಡಲಿ ಬಿದ್ದಲ್ಲಿಯವರೆಗೆ ಹಿಂದೆ ಸರಿದು ಸೃಷ್ಟಿಯಾದ ಭೂಭಾಗವೇ ಈ ಪರಶುರಾಮ ಸೃಷ್ಟಿ. ಬಹುಶಃ ಪಶ್ಚಿಮ ಘಟ್ಟದ ಕೆಳಗಿನ ಭೂಭಾಗದಲ್ಲಿ ಈ ಜಿಲ್ಲೆ ಇರುವುದರಿಂದ ಈ ನಂಬಿಕೆಗೆ ಪುಷ್ಟಿ ಬಂದಿರಬಹುದು. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ೧೫೦ ಕಿಲೋ ಮೀಟರ್ ಕರಾವಳಿ ಪ್ರದೇಶವನ್ನು ಹೊಂದಿದೆ. ಇಲ್ಲಿನ ಮುಖ್ಯ ಕಸುಬು ಮೀನುಗಾರಿಕೆ. ಇಲ್ಲಿ ಆಳವಾದ ಮೀನುಗಾರಿಕೆಯನ್ನು ಮಾಡುತ್ತಾರೆ. ಭತ್ತ ಮತ್ತು ತೆಂಗು ಇಲ್ಲಿಯ ಮುಖ್ಯ ಬೆಳೆಗಳು. ಜಿಲ್ಲೆಗಳಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಅಭಿವೃದ್ದಿ ಹೊಂದಿದ ಜಿಲ್ಲೆ.ಮಂಗಳೂರು ನಗರವು ಇಲ್ಲಿಯ ಜಿಲ್ಲಾ ಕೇಂದ್ರವಾಗಿದೆ. ಮಂಗಳೂರು ನಗರವು ತ್ವರಿತಗತಿಯಲ್ಲಿ ಅಭಿವೃದ್ದಿ ಹೊಂದುತ್ತ ಇದೆ.ಬೆಂಗಳೂರಿನ ನಂತರ ೨ನೇ ಅಭಿವೃದ್ದಿ ಹೊಂದುತ್ತಿರುವ ನಗರ. ಇಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ,ಪ್ರಮುಖ ಬಂದರು ಇದೆ ಇದು ದೇಶದಲ್ಲಿಯೇ ೭ ಬೃಹತ್ ಬಂದರು. ಇಲ್ಲಿನ ರೈಲು ನಿಲ್ದಾಣವು ದೇಶದ ಪ್ರಮುಖ ನಿಲ್ದಾಣಗಳಲ್ಲಿ ಒಂದು.ಈ ಜಿಲ್ಲೆಯನ್ನು ಬುದ್ದಿವಂತರ ಜಿಲ್ಲೆಯೆಂದು ಕರೆಯುತ್ತಾರೆ. ಶೈಕ್ಷಣಿಕವಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಕ್ರಾಂತಿಯಲ್ಲಿ ಬಹಳ ಮುಂದುವರಿದಿದೆ. ಜಿಲ್ಲೆಯು ನೈಸಗಿ೯ಕವಾಗಿ ನೋಡಲು ಚೆಂದ ಇಲ್ಲಿಯ ಪ್ರಕೃತಿ ಸೌಂದಯ೯ವನ್ನು ನೋಡಲು ದೇಶ ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ರಮಣೀಯವಾದಂತ ಗುಡ್ಡ ಬೆಟ್ಟಗಳು, ಬಯಲು ಸೀಮೆಗಳು, ನಿತ್ಯಹರಿದ್ವಣ೯ದ ಕಾಡುಗಳು,ಸಂಜೆಯ ಹೊತ್ತಿಗೆ ಕಡಲ ತೀರದಲ್ಲಿ ಸೂಯ೯ನು ಸಮುದ್ರವನ್ನು ತನ್ನ ಅಂತರಂಗದಲ್ಲಿ ಅದುಮಿಟ್ಟಾಗೆ ಪ್ರವಾಸಿಗರಿಗೆ ಗೋಚರಿಸಲ್ಪಡುತ್ತದೆ. ಜಿಲ್ಲೆಯು ಮುಖ್ಯವಾಗಿ ಶೈಕ್ಷಣಿಕವಾಗಿ ಬಹಳ ಮುಂದುವರಿದಿದೆ. ಇಲ್ಲಿ ಅತ್ಯಂತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತದೆ ವೈದ್ಯಕೀಯ, ದಂತ, ನಸಿ೯ಂಗ್, ಬಿ.ಪಿ.ಟಿ, ಇಂಜಿನಿಯರಿಂಗ್, ಯಮ್.ಬಿ.ಎ, ಮುಂತಾದ ಕೋಸ್೯ಗಳು ಇಲ್ಲಿ ಲಭ್ಯವಿದೆ, ಅತೀ ಕಡಿಮೆ ವೆಚ್ಚದಲ್ಲಿ ಶಿಕ್ಷಣವನ್ನು ನೀಡಲಾಗುತ್ತಿದೆ. ಸ್ವಾತಂತ್ರ್ಯದ ನಂತರ ಈ ಜಿಲ್ಲೆ ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡಿತ್ತು. ೧೯೫೬ರ ಪುನರ್ ವಿಂಗಡನೆ ಸಂದರ್ಭದಲ್ಲಿ ಅವಿಭಜಿತ ದಕ್ಷಿಣ ಕನ್ನಡವನ್ನು ಮೈಸೂರು ರಾಜ್ಯಕ್ಕೆ ಹಾಗೂ ಕಾಸರಗೋಡು ಜಿಲ್ಲೆಯನ್ನು ಕೇರಳ ರಾಜ್ಯಕ್ಕೆ ಸೇರಿಸಲಾಯಿತು. ದಕ್ಷಿಣ ಕನ್ನಡವನ್ನು ಬುದ್ದಿವಂತರ ನಾಡು ಎಂದು ಕರೆಯಲಾಗುತ್ತದೆ. ಭಾಷೆಗಳು ತುಳು ಮಾತನಾಡುವ ಜನ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಉಡುಪಿ ಜಿಲ್ಲೆಯ ತೆಂಕು ಭಾಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಬಡಗು ಭಾಗವನ್ನು ಒಟ್ಟಾಗಿ ತುಳುನಾಡು ಎಂದು ಕರೆಯುತ್ತಾರೆ. ಇಲ್ಲಿನ ಇತರ ಭಾಷೆಗಳೆಂದರೆ ತುಳು ಕನ್ನಡ ಹವ್ಯಕ ಕನ್ನಡ ಕುಂದಾಪುರ ಕನ್ನಡ ಅರೆಬಾಸೆ ಕೊಂಕಣಿ ಬ್ಯಾರಿ ಭಾಷೆ ಐತಿಹಾಸಿಕ ಸ್ಥಳಗಳು ಶ್ರೀ ದುಗಾ೯ಪರಮೇಶ್ವರಿ ದೇವಸ್ಥಾನ, ಕಟೀಲು ಸ್ವಾಮಿ ಕೊಡಮಣಿತ್ತಾಯ ದೈವಸ್ಥಾನ, ಶಿಭರೂರು ಬೋಳಾರ: ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನ. ಬೋಳಾರ: ಶ್ರೀ ಮಂಗಳಾದೇವಿ ದೇವಸ್ಥಾನ. ಬೋಳಾರ: ಶ್ರೀ ಹನುಮಾನ್ ದೇವಸ್ಥಾನ. ಕುದ್ರೋಳಿ: ಶ್ರೀ ಗೋಕರ್ನಾಥೇಶ್ವರ ದೇವಸ್ಥಾನ. ಮುಲ್ಕಿ: ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ. ಮೂಡುಬಿದಿರೆ: ಸಾವಿರ ಕಂಬದ ಬಸದಿ (ತ್ರಿಭುವನ ತಿಲಕ ಚೂಡಾಮಣಿ ಬಸದಿ), ಶ್ರೀ ಹನುಮಂತ ದೇವಸ್ಥಾನ, ಗುರು ಬಸದಿ (ಸಿದ್ಧಾಂತ ಬಸದಿ) ಉರ್ವ : ಶ್ರೀ ಮಾರಿಯಮ್ಮ ದೇವಸ್ಥಾನ ಹಂಪನಕಟ್ಟೆ : ಶ್ರೀ ಶರವು ಮಹಾ ಗಣಪತಿ ದೇವಸ್ಥಾನ ಕದ್ರಿ: ಕದ್ರಿ ಶ್ರೀ ಮಂಜುನಾಥ ದೇವಸ್ಥಾನ. ಮರೋಳಿ : ಇತಿಹಾಸ ಪ್ರಸಿದ್ಧ ಶ್ರೀ ಸೂರ್ಯ ನಾರಾಯಣ ಸ್ವಾಮಿ ದೇವಸ್ಥಾನ ಧರ್ಮಸ್ಥಳ:ಶ್ರೀ ಮಂಜುನಾಥ ಸ್ವಾಮಿ ದೇವಾಸ್ಥಾನ. ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ. ಕುತ್ತಾರ್: ಕೊರಗಜ್ಜ ಆದಿಸ್ಥಳ( ಶ್ರೀ ಪಂಜಂದಾಯ ಬಂಟ ದೈವಸ್ಥಾನ ಭಂಡಾರ ಬೈಲ್). ಕೊಂಡಾಣ: ಕೊಂಡಾಣ ಶ್ರೀ ಪಿಲಿಚಂಡಿ ಬಂಟ ದೈವಸ್ಥಾನ). ಮಂಜನಾಡಿ: ಶ್ರೀ ಮಾಲರಾಯ ದೈವಸ್ಥಾನ). ಮಂಜನಾಡಿ ಅಸಯ್ಯಿದ್ ಇಸ್ಮಾಯಿಲ್ ವಳಿಯುಲ್ಲಾಹಿ ದರ್ಗಾ ಷರೀಫ್ ಕರ್ಬಿಂಸ್ತಾನ ದೈವಸ್ಥಾನ. ನೆಲ್ಲಿತೀರ್ಥ:ಶ್ರೀ ಸೋಮನಾಥೇಶ್ವರ ಗುಹಾಲಯ. ಕುಕ್ಕೆ ಸುಬ್ರಹ್ಮಣ್ಯ: ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಕುಕ್ಕೆ. ಶ್ರೀ ಸುಬ್ರಹ್ಮಣ್ಯ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ . ಪುತ್ತೂರು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ಲ್, ಕೋಟಿ ಚೆನ್ನಯರ ಮೂಲಸ್ಥಾನ. ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ. ಪುತ್ತೂರು ಕರವಡ್ತ ವಲಿಯುಲ್ಲಾಹಿ ದರ್ಗಾ ಶರೀಫ್. ಕಾರ್ಕಳ: ಗೊಮ್ಮಟೇಶ್ವರ ಬೆಟ್ಟ, ಚತುರ್ಮುಖ ಬಸದಿ, ಅನಂತಶಯನ ದೇವಸ್ಥಾನ, ಕಾರ್ಕಳ ಪಡುತಿರುಪತಿ ವೆಂಕಟರಮಣ ದೇವಸ್ಥಾನ. ಕಾರ್ಕಳ: ಅತ್ತೂರು ಸೈಂಟ್ ಲಾರೆನ್ಸ್ ಚರ್ಚ್. ಪುತ್ತಿಗೆ: ಮಹಾತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ. ಕೊಡ್ಯಡ್ಕ:ಹೊಸನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ. ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನ. ಬಪ್ಪನಾಡು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ. ಸೋಮೇಶ್ವರ: ಶ್ರೀ ಸೋಮನಾಥೇಶ್ವರ ದೇವಸ್ಥಾನ. ಕೃಷ್ಣಾಪುರ:ಇಲ್ಲಿ ಅಷ್ಟಮಠಗಳಲ್ಲಿ ಒಂದಾದ ಕೃಷ್ಣಾಪುರ ಮಠದ ಶಾಖೆ ಇಲ್ಲಿ ಇದೆ. ವೇಣೂರು: ವೇಣೂರು ೩೪ ಅಡಿ ಎತ್ತರದ ಏಕಶಿಲಾ ಬಾಹುಬಲಿ ವಿಠಲ ಶ್ರೀ ಸೋಮನಾಥೇಶ್ವರ ದೇವಸ್ಥಾನ, ದರೆಗುಡ್ಡೆ. ಶ್ರೀ ಶಂಭುಲಿಂಗೇಶ್ವರ ದೇವಸ್ಥಾನ, ದರೆಗುಡ್ಡೆ. ಕೊಕ್ಕಡ :ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಕೊಕ್ಕಡ ವಿಷ್ಣುಮೂರ್ತಿ ವೈದ್ಯನಾಥೇಶ್ವರ ದೇವಸ್ಥಾನ ಮಠಂತಬೆಟ್ಟು.ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು, ಪುತ್ತೂರು: ಎಣ್ಮೂರು ಬೈದರ್ಕಳ ಗರಡಿ ಬಂಟ್ವಾಳ : ನವದುರ್ಗಾ ಶ್ರೀ ಲಕ್ಷ್ಮೀ ಜನಾರ್ದನ ಮಠ ಸಾನಿಧ್ಯ ಪಂಬತ್ತಜೆ ಕರೋಪಾಡಿ ಗ್ರಾಮ ಬಂಟ್ವಾಳ ತಾಲೂಕು ಉಳ್ಳಾಲ: ಸಯ್ಯದ್ ಮದನಿ ದರ್ಗಾ ಶರೀಫ್. ಅಡ್ಯಾರ್ ಕಣ್ಣೂರು: ಶೈಖ್ ಯೂಸುಫ್ ಸಿದ್ದೀಕ್ ದರ್ಗಾ ಶರೀಫ್. ಅಜಿಲಮೊಗರು: ಬಾಬಾ ಫಕ್ರುದ್ದೀನ್ ದರ್ಗಾ ಶರೀಫ್. ಕಾಜೂರು: ಹಯಾತುಲ್ ಅವುಲಿಯಾ ದರ್ಗಾ ಶರೀಫ್. ದುಗ್ಗಲಡ್ಕ: ಸಯ್ಯದ್ ಫಕ್ರುದ್ದೀನ್ ದರ್ಗಾ ಶರೀಫ್. ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನ. ಸುಳ್ಯ ಚೆನ್ನಕೇಶವ ದೇವಸ್ಥಾನ ಅಡ್ಕಾರು ಸುಬ್ರಮಣ್ಯ ದೇವಸ್ಥಾನ. ಇರಾ ಶ್ರೀ ಸೋಮನಾಥ ದೇವಸ್ಥಾನ. ನೀಟಿಲಾಕ್ಷ ದೇವಸ್ಥಾನ ( netla.) ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಅರಮನೆ ಕೇಪು ಉಳ್ಳಾಲ್ತಿ ದೈವಸ್ತಾನ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ. ಇವನ್ನೂ ನೋಡಿ ಕರ್ನಾಟಕದ ಜಿಲ್ಲೆಗಳು ದಕ್ಷಿಣ ಕನ್ನಡ (ಲೋಕ ಸಭೆ ಚುನಾವಣಾ ಕ್ಷೇತ್ರ) ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಹಳ್ಳಿಗಳು ಉಲ್ಲೇಖಗಳು ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕದ ಜಿಲ್ಲೆಗಳು
1027
https://kn.wikipedia.org/wiki/%E0%B2%95%E0%B3%8B%E0%B2%B2%E0%B2%BE%E0%B2%B0
ಕೋಲಾರ
ಕೋಲಾರ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಇಲ್ಲಿರುವ ಚಿನ್ನದ ಗಣಿಗಳು ಮತ್ತು ಚಿನ್ನದ ಗಣಿಗಾರಿಕೆಗೆ ಕೋಲಾರ ಜಿಲ್ಲೆ ಪ್ರಸಿದ್ಧ. ಕೋಲಾರ ನಗರ ಈ ಜಿಲ್ಲೆಯ ಕೇಂದ್ರಸ್ಥಾನ. ಕೋಲಾರ ಗಂಗರ ರಾಜಧಾನಿಯಾಗಿತ್ತು ಇದನ್ನು ಮೊದಲು ಕುವಲಾಲಪುರ ಅಂತಲೂ ಕರೆಯುತ್ತಿದ್ದರು. ಕಾಲ ಕ್ರಮೇಣ ಕೋಲಾರವಾಯಿತು. ಗಂಗರು ಕಟ್ಟಿಸಿದಂತ ಹಲವಾರು ಸ್ಥಳಗಳು ಕೋಲಾರದಲ್ಲಿ ಮತ್ತು ಕೋಲಾರ ಜಿಲ್ಲೆಯಲ್ಲಿವೆ ಅದರಲ್ಲೂ ಮುಖ್ಯವಾಗಿ ಗಂಗರು ಕಟ್ಟಿಸಿದ ಕೋಲಾರಮ್ಮ ದೇವಾಲಯ ಜಿಲ್ಲೆಯಲ್ಲಿಯೆ ಪ್ರಸಿದ್ದಿಯನ್ನು ಪಡೆದಿದೆ. ಕೋಲಾರ ಜಿಲ್ಲೆಯ ಬಗ್ಗೆ ನಾಡಿಗೆ ಮತ್ತು ರಾಷ್ಟ್ರಕ್ಕೆ ತನ್ನೊಡಲ ಚಿನ್ನವನ್ನು ಧಾರೆಯೆರೆದು ‘ಚಿನ್ನದ ನಾಡು’ ಎಂದೇ ಹೆಸರಾಗಿದ್ದ ಕೋಲಾರ ಜಿಲ್ಲೆಯು ನಾಡಿನ ಕೃಷಿ, ಸಾಹಿತ್ಯ, ರಾಜಕೀಯ ಹಾಗೂ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆ ನೀಡಿದ ಗೌರವಕ್ಕೆ ಪಾತ್ರವಾಗಿದೆ. ಸಿಲ್ಕ್ ಅಂಡ್ ಮಿಲ್ಕ್, ಹಣ್ಣು ಮತ್ತು ತರಕಾರಿಗಳ ರಾಜಧಾನಿ ಎನಿಸಿರುವ ಕೋಲಾರ ಜನಪದ ಹೋರಾಟಗಳು ಮತ್ತು ಜನಪದ ಸಂಸ್ಕೃತಿಯನ್ನು ಮೆರೆದಿದೆ . ಆಗಸ್ಟ್ ೨೦೦೭ರಂದು ಚಿಕ್ಕಬಳ್ಳಾಪುರ ಉಪವಿಭಾಗವು ಸ್ವತಂತ್ರ ಜಿಲ್ಲೆಯಾಗಿ ಕೋಲಾರದಿಂದ ವಿಭಜನೆ ಹೊಂದಿದೆ.ಕೋಲಾರ ಜಿಲ್ಲೆಯ ಮುಖ್ಯ ಕಸುಬುಗಳೆಂದರೆ ಕೃಷಿ, ಪಶು ಸಾಕಾಣಿಕೆ ಹಾಗೂ ರೇಷ್ಮೆ ಉದ್ಯಮ. ಶಿವಾರ ಪಟ್ಟಣ ಕಲ್ಲಿನಿಂದ ಕೆತ್ತಿರುವ ಶಿಲ್ಪಕಲೆಗೆ ಪ್ರಖ್ಯಾತಿ.ಕೋಲಾರನ್ನು ಚಿನ್ನದ ಗಣಿ ಎಂದು ಸಹ ಕರೆಯುತ್ತಾರೆ ಇತಿಹಾಸ ಐತಿಹಾಸಿಕವಾಗಿ ಕೋಲಾರವು ೨ ನೇ ಶತಮಾನದಲ್ಲಿಯೇ ಗಂಗರ ರಾಜಧಾನಿಯಾಗಿದ್ದು, ನಂತರ ಚೋಳರ ಆಳ್ವಿಕೆಗೆ ಒಳಪಟ್ಟಿದೆ. ೪ ರಿಂದ ೧೯ ನೇ ಶತಮಾನದವರೆಗೆ ಕದಂಬ, ಗಂಗ, ಪಲ್ಲವ, ಚೋಳ, ಚಾಲುಕ್ಯ, ಹೊಯ್ಸಳ, ರಾಷ್ಟ್ರಕೂಟ ಅರಸರು, ಮೈಸೂರಿನ ಅರಸರು, ಪಾಳೇಗಾರರು ಹೈದರಾಲಿ ಹಾಗೂ ಟಿಪ್ಪು ಸುಲ್ತಾನರ ಆಳ್ವಿಕೆಗೆ ಒಳಪಟ್ಟಿತ್ತು. ಜನಸಂಖ್ಯೆ ೨೦೨೧ ರ ಆದಾರ್ ನೊಂದಣಿ ಪ್ರಕಾರ, ಕೋಲಾರ ಜಿಲ್ಲೆಯ ಜನಸಂಖ್ಯೆಯು 16,53,320 ಆಗಿದೆ ಹಾಗೂ ೨೦೧೧ ರ ಜನಗಣತಿಯ ಪ್ರಕಾರ 15,36,411. ಇದರಲ್ಲಿ ಪುರುಷರ ಸಂಖ್ಯೆ 776,396 ಹಾಗು ಸ್ತೀಯರ ಸಂಖ್ಯೆ 760,005 ಇದೆ . ಜಿಲ್ಲೆಯ ಪ್ರಮುಖರು ಸಾಹಿತ್ಯ, ಸಂಸ್ಕೃತಿ ಹಾಗೂ ರಾಜಕೀಯ ಕ್ಷೇತ್ರಗಳಿಗೆ ವಿಶೇಷ ಕೊಡುಗೆ ನೀಡಿರುವ ಈ ಜಿಲ್ಲೆಯು ನಾಡಿನ ಮೊದಲ ಮುಖ್ಯಮಂತ್ರಿ ಕೆ.ಚಂಗಲರಾಯರೆಡ್ಡಿ ಅವರನ್ನು ಕೊಟ್ಟ ಹೆಗ್ಗೆಳಿಕೆಗೆ ಪಾತ್ರವಾಗಿದೆ. ಶ್ರೀ ಟಿ ಚನ್ನಯ್ಯ ಕರಡು ಸಮಿತಿ ಸದಸ್ಯರು, ಡಾ. ಬಿಆರ್ ಅಂಬೇಡ್ಕರ್ ಅವರಿಗೆ ಆತ್ಮೀಯರು, ಭಾರತದ ಮೊದಲ ತಂಡದ ರಾಜ್ಯ ಸಭಾ ಸದಸ್ಯರು ಮೈಸೂರು ರಾಜ್ಯದ ಮಂತ್ರಿಯಾಗಿದ್ದರು ಬೆಂಗಳೂರು ನಗರ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿದ್ದರು ಕರ್ನಾಟಕ ವಿದ್ಯುತ್ ಶಕ್ತಿ ಮಂಡಳಿ ಅಧ್ಯಕ್ಷರಾಗಿದ್ದರು ಕೋಲಾರಕ್ಕೆ ವಿದ್ಯುತ್ ತರಲು ನೀರು ತರಲು ಹೋರಾಡಿದವರು, ಉತ್ತಮವಾದ ನಗರ ರಚನೆ ಮಾಡಿ ಕೋಲಾರದ ಗಾಂಧಿನಗರ ನಿರ್ಮಿಸಿದವರು ಕೈವಾರ ನಾರಣಪ್ಪ ಸರ್.ಎಂ.ವಿಶ್ವೇಶ್ವರಯ್ಯ ಮಲ್ಲಿಕರ್ಜುನ ರೆಡ್ಡಿ ಸೂಕ್ಷ್ಮ ಕಲೆ ಗಿನ್ನೆಸ್ ವಿಶ್ವ ದಾಖಲೆ.ತೊಪ್ಪನಹಳ್ಳಿ. ಶಿಕ್ಷಣ ತಜ್ಞ ಎಚ್. ನರಸಿಂಹಯ್ಯ ತೀ.ತಾ. ಶರ್ಮ. ಗಟ್ಟಹಳ್ಳಿ ಆಂಜನಪ್ಪಸ್ವಾಮಿ ಡಿ. ವಿ. ಗುಂಡಪ್ಪ ಸೌಂದರ್ಯ ವೆಂಕಟೇಶ ಅಯ್ಯಂಗಾರ್ ಅ.ನಾ.ಪ್ರಹ್ಲಾದರಾವ್ ಪದಬಂಧ ರಚನೆಯಲ್ಲಿ ಲಿಮ್ಕಾ ರಾಷ್ಟ್ರೀಯ ದಾಖಲೆಕಾರ [[ಪಿಚ್ಚಳ್ಳಿ ಶ್ರೀನಿವಾಸ್] ಗಾಯಕ ಮತ್ತು ರಂಗಕರ್ಮಿ ಕುಪ್ನಳ್ಳಿ ಎಂ. ಬೈರಪ್ಪ, ಕವಿ ಮತ್ತು ವಿಮರ್ಶಕರು ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ- ಪ್ರಾಧ್ಯಾಪಕರು ಮತ್ತು ಲೇಖಕರು. ಮಂಸೋರೆ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ, ಚಿತ್ರ ಕಲಾವಿದ, ಲೇಖಕ, ಹವ್ಯಾಸಿ ಪತ್ರಕರ್ತ ಆಕರ್ಷಣೆಗಳು ಕೋಲಾರ ಜಿಲ್ಲೆಯಲ್ಲಿರುವ ಕೆಲವು ಚಾರಿತ್ರಿಕ ಸ್ಥಳಗಳೆ೦ದರೆ ಚಿನ್ನದ ಗಣಿ (ಕೆ.ಜಿ.ಎಫ್), ಮುಳಬಾಗಿಲು, ಬ೦ಗಾರು ತಿರುಪತಿ, ಕೋಟಿಲಿ೦ಗೇಶ್ವರ, ಅ೦ತರಗ೦ಗೆ, ಮಾರ್ಕ೦ಡೇಯ ಪರ್ವತ, ಸೋಮೇಶ್ವರ ದೇವಸ್ಥಾನ, ಕೋಲಾರಮ್ಮ ದೇವಸ್ಥಾನ, ಕುರುಡುಮಲೆ, ಆವಣಿ, ಚಿಕ್ಕ ತಿರುಪತಿ ಮುರುಗಮಲ್ಲ ದರ್ಗ(ಚಿಂತಾಮಣಿ), ನಂದಿ ಬೆಟ್ಟ (ಈಗ ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರಿದೆ), ವಿಧುರಾಶ್ವತ್ಥ (ಗೌರಿಬಿದನೂರು) ಶ್ರೀ ಮನ್ಮಾಧವ ತೀಥ೯ರ ಮೂಲ ಮಹಾ ಸಂಸ್ಠಾನ ಮಠ ಇದೆ. ಮರುಗಮಲ್ಲ ಗ್ರಾಮ ಮುಸ್ಲಿಂರ ಪವಿತ್ರ ಕ್ಷೇತ್ರವಾಗಿದೆ. ನಗರದ ಸುಧಾರಣೆ ಕೋಲಾರದಲ್ಲಿ ಕಸದ ಪ್ರಮಾಣ ಮತ್ತು ಪ್ಲಾಸ್ಟಿಕ್ ಬಳಕೆ ಹೆಚ್ಚಿರುವುದನ್ನು ಕಂಡು, 'ಗೋ ಪ್ಲಾಗ್!' ಎಂಬ ವಿಶಿಷ್ಟ ಅಭಿಯಾನವನ್ನು ಸುಮಂಗಲಿ ನೋಹ ಪ್ರಾರಂಭಿಸಿದ್ದಾರೆ. ಈ ಸಂಸ್ಥೆಯು ಕೋಲಾರವನ್ನು ಕಸ ಮುಕ್ತಗೊಳಿಸಲು ಪಣತೊಟ್ಟಿದೆ. ಹೆಚ್ಚಿನ ಹಳೆಯ ಕಟ್ಟಡಗಳನ್ನು ಬಿಳಿಸಿ, ಹೊಸ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಇದನ್ನೂ ನೋಡಿ ಕೋಲಾರ (ಲೋಕ ಸಭೆ ಚುನಾವಣಾ ಕ್ಷೇತ್ರ) ಉಲ್ಲೇಖಗಳು ಭೂಗೋಳ ಕರ್ನಾಟಕದ ಜಿಲ್ಲೆಗಳು ಕೋಲಾರ ಜಿಲ್ಲೆಯ ತಾಲೂಕುಗಳು ಕರ್ನಾಟಕದ ಪ್ರಮುಖ ಸ್ಥಳಗಳು ಭಾರತದ ಹಿಂದಿನ ರಾಜಧಾನಿ ನಗರಗಳು
1029
https://kn.wikipedia.org/wiki/%E0%B2%95%E0%B3%8A%E0%B2%A1%E0%B2%97%E0%B3%81
ಕೊಡಗು
ಕೊಡಗು ಜಿಲ್ಲೆ (ಕೊಡಗನ್ನು ಕೊಡವ ನಾಡ್ ಎಂದು ಕರೆಯಲಾಗುತ್ತದೆ), ಕರ್ನಾಟಕ ರಾಜ್ಯ ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಶಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಪರಿಸರದಲ್ಲಿದೆ. ಅದರ ಬಗ್ಗೆ ಹಲವಾರು ಕನ್ನಡ ಕವಿಗಳು ವರ್ಣಿಸಿದ್ದಾರೆ. ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡವರ ನಾಡಲಾ ಅಲ್ಲೆ ಕೊಡವರ ಬೀಡಲಾ ಭೂಲಕ್ಷ್ಮಿಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. . ಹೆಸರಿನ ನಿಷ್ಪತ್ತಿ ಕೊಡಗಿಗೆ ಕೂರ್ಗ್ (Coorg) ಎಂಬ ಆಂಗ್ಲೀಯ ಬಳಕೆಯೂ ಇದೆ. ಭಾರತದ 'ಸ್ಕಾಟ್ ಲ್ಯಾಂಡ್' ಎಂಬ ಹೆಸರೂ ಇದಕ್ಕಿದೆ.https://tripedia.info/attraction/coorg-karnataka-india/ 'ಕೊಡಗು' - ಕನ್ನಡದ ಕುಡು, ಎಂದರೆ ಗುಡ್ಡ ಅಥವಾ ಬೆಟ್ಟದ ಪ್ರದೇಶ ಎಂಬುದರಿಂದ ಬಂದಿರಬಹುದೆಂದು ಭಾವಿಸಲಾಗಿದೆ. ಇಲ್ಲಿಯ ಜನ ಕೊಡವರು ಮುಖ್ಯ (ಮೂಲ) ಜನರು. ಕೊಡವ ತಕ್ಕ್ ಹಾಗೂ ಅರೆಭಾಷೆ ಕೊಡಗಿನಲ್ಲಿ ಪ್ರಮುಖವಾಗಿ ಬಳಸಲಾಗುವ ಭಾಷೆಗಳು, ದಿನನಿತ್ಯದ ವ್ಯವಹಾರದಲ್ಲಿ ಹೆಚ್ಚಿನ ಜನರು ಕೊಡವ ತಕ್ಕ್ ಅನ್ನು ಬಳಸುತ್ತಾರೆ. ಕನ್ನಡ ಆಡಳಿತ ಭಾಷೆ. ಇದಲ್ಲದೆ ಮಲಯಾಳಂ,ತಮಿಳು, ತುಳು,ರಾವುಲ, ಮುಂತಾದವನ್ನು ಆಡುವವರು ಇಲ್ಲಿರುವರು.https://www.yatra.com/india-tourism/coorg/language ಕೊಡವ ಭಾಷೆ ಅಥವಾ ಕೊಡವ ತಕ್ಕ್‌ಗೆ ಲಿಪಿ ಇದೆ,ಹಾಗೂ ಅರೆಬಾಷೆಗೆ ಇಲ್ಲ. ಕೊಡವ ಭಾಷೆಯನ್ನು ಸುಮಾರು 3೦೦,೦೦೦ ಜನರು ಮಾತನಾಡಲು ಬಳಸುತ್ತಾರೆ ಹಾಗೂ ಅರೆಬಾಷೆಯನ್ನು 2,00,000 ಜನ ಬಳಸುತ್ತಾರೆ. ಯೆರವರು (ಅಥವಾ ರಾವುಲರು), ಕೊಡಗಿನಲ್ಲಿ ಹಾಗೂ ಕೇರಳದಲ್ಲಿ (ಇಲ್ಲಿ ಅಡಿಯರು ಎಂದು ಕರೆಯಲ್ಪಡುತ್ತಾರೆ) ಇದ್ದಾರೆ. ಇವರು ಪ್ರಮುಖವಾಗಿ ಹಿಂದೂಗಳು ಹಾಗೂ ವ್ಯವಸಾಯಗಾರರು. ಜನಸಂಖ್ಯೆ ೨೦೧೧ರ ಜನಗಣತಿಯ ಪ್ರಕಾರ ಕೊಡಗಿನ ಜನಸಂಖ್ಯೆ ೫,೫೪,೭೬೨.http://www.census2011.co.in/census/district/259-kodagu.html ಇವರಲ್ಲಿ ೨,೭೪,೭೨೫ ಪುರುಷರು ಮತ್ತು ೨,೮೦,೦೩೭ ಸ್ತ್ರೀಯರು. ಅಂದರೆ ಪ್ರತಿ ೧೦೦೦ ಪುರುಷರಿಗೆ ೧೦೧೯ ಸ್ತ್ರೀಯರಿದ್ದಾರೆ. ಕೊಡಗಿನ ಒಟ್ಟು ವಿಸ್ತೀರ್ಣವನ್ನು ೪,೧೦೨ ಚದರ ಕಿಲೊಮೀಟರನ್ನು ಪರಿಗಣಿಸಿದಾಗ ಇಲ್ಲಿನ ಜನಸಾಂದ್ರತೆ ಪ್ರತಿ ಚದರ ಕಿಲೊಮೀಟರಿಗೆ ೧೩೫ ಮಂದಿ. ಕೊಡಗಿನ ಒಟ್ಟು ಜನಸಂಖ್ಯೆಯಲ್ಲಿ ೪,೧೪,೩೦೫ ಮಂದಿ ( ಅಂದರೆ ೮೨.೫೨% ) ಅಕ್ಷರಸ್ಥರು. ಇವರಲ್ಲಿ ೨,೧೬,೪೧೩ ಮಂದಿ ಪುರುಷರು (೮೭.೨೪%) ಮತ್ತು ೧,೯೭,೮೯೨ ಸ್ತ್ರೀಯರು (೭೭.೯೧%). ಈ ಕೆಳಗಿನ ಕೋಷ್ಠಕದಲ್ಲಿ ಕೊಡಗಿನ ಕುರಿತ ಅಂಕಿ-ಅಂಶಗಳನ್ನು ೨೦೦೧ರ ಜನಗಣತಿಯೊಡನೆ ಹೋಲಿಸಿ ಕೊಡಲಾಗಿದೆ: ಭೂಗೋಳ ಕೊಡಗು ತನ್ನ ಪಶ್ಚಿಮ ಸರಹದ್ದಿನಲ್ಲಿ ದಕ್ಷಿಣ ಕನ್ನಡದ ಜಿಲ್ಲೆಯನ್ನೂ, ಉತ್ತರಕ್ಕೆ ಹಾಸನ, ಪೂರ್ವಕ್ಕೆ ಮೈಸೂರು, ದಕ್ಷಿಣಕ್ಕೆ ಕೇರಳದ ಕಣ್ಣೂರು ಜಿಲ್ಲೆಗಳನ್ನೂ ಹೊಂದಿದೆ. ಈ ಜಿಲ್ಲೆಯ ರಾಜಧಾನಿ ಮಡಿಕೇರಿ (ಮರ್ಕೆರಾ ಎಂದೂ ಆಂಗ್ಲದಲ್ಲಿ ಕರೆಯಲಾಗುತ್ತದೆ). ಕೊಡಗು ಮೊದಲು ಬ್ರಿಟಿಷರ ಕಾಲದಲ್ಲಿ ಸ್ವತಂತ್ರ ರಾಜ್ಯವಾಗಿತ್ತು. ಸ್ವಾತಂತ್ರ್ಯಾನಂತರ ಭಾಷಾವಾರು ರಾಜ್ಯವಿಂಗಡನೆಯಾದಾಗ ಮೈಸೂರು ರಾಜ್ಯಕ್ಕೆ ಜಿಲ್ಲೆಯಾಗಿ ಸೇರಲ್ಪಟ್ಟಿತು. ತಾಲೂಕುಗಳು ಕೊಡಗಿನಲ್ಲಿ ಐದುತಾಲೂಕುಗಳಿವೆ. ಕೊಡಗಿನ ೩ ತಾಲುಕಿನಲ್ಲು ಪ್ರವಾಸಿ ಕೆಂದ್ರಗಳಿವೆ. ಮಡಿಕೇರಿ ವಿರಾಜಪೇಟೆ ಸೋಮವಾರಪೇಟೆ ಕುಶಾಲನಗರ ಪೊನ್ನಂಪೇಟೆ ಮಡಿಕೇರಿ ತಾಲುಕಿನ ಪ್ರೇಕ್ಷಣೀಯ ಸ್ಥಳಗಳು ಪ್ರೇಕ್ಷಣೀಯ ಸ್ಥಳಗಳಲ್ಲಿ ಮುಖ್ಯವಾಗಿ ಮಡಿಕೇರಿ ತಾಲೂಕಿನಲ್ಲಿ ಅಬ್ಬಿ ಜಲಪಾತ, ಓಂಕಾರೇಶ್ವರ ದೇವಸ್ಥಾನ, ಗದ್ದಿಗೆ, ಅರಮನೆ, ರಾಜಸೀಟ್, ತಲಕಾವೇರಿ, ಇತ್ಯಾದಿಗಳಾದರೆ, ಎಮ್ಮೆಮಾಡ್ (ಸೂಫೀ ಶ ಹೀ ದ್) ವಿರಾಜಪೇಟೆ ತಾಲೂಕಿನ ಪ್ರೇಕ್ಷಣೀಯ ಸ್ಥಳಗಳು ವಿರಾಜಪೇಟೆ ತಾಲೂಕಿನಲ್ಲಿ- ನಾಗರಹೊಳೆ , ಇರ್ಪು, ಕುಂದ, ಟೀ ಏಸ್ಟೇಟ್, ಸೈಂಟ್ ಏನ್ಸ್ ಚರ್ಚ್, ಇಗ್ಗುತ್ತಪ್ಪ ದೇವಸ್ಥಾನ, ನಾಲ್ಕುನಾಡು ಅರಮನೆ, ಮುಂತಾದವು ಇವೆ. ಕುಶಾಲನಗರ ತಾಲೂಕಿನ ಪ್ರೇಕ್ಷಣೀಯ ಸ್ಥಳಗಳು ಕುಶಾಲನಗರ ತಾಲೂಕಿನಲ್ಲಿ- ಕಾವೇರಿ ನಿಸರ್ಗಧಾಮ, [[ಟಿಬೆಟ್ಟಿನ ಸ್ವರ್ಣದೇಗುಲ]ಪಿರಿಯಾಪಟ್ಟಣ{ತಾ}]], ವೀರಭೂಮಿ, ದುಬಾರೆ ಅರಣ್ಯ, ಹಾರಂಗಿ ಜಲಾಶಯ, ಚಿಕ್ಲಿ ಹೊಳೆ ಮೊದಲಾದವಿವೆ. ಸೋಮವಾರಪೇಟೆ ತಾಲೂಕಿನ ಪ್ರೇಕ್ಷಣೀಯ ಸ್ಥಳಗಳು ಸೋಮವಾರಪೇಟೆ ತಾಲೂಕಿನಲ್ಲಿ- ಹೊನ್ನಮ್ಮನ ಕೆರೆ, ಮಲ್ಲಳ್ಳಿ ಜಲಪಾತ, ಪುಷ್ಪಗಿರಿ ಅಭಯಾರಣ್ಯ ಮೊದಲಾದವಿವೆ. ಬೆಳೆಗಳು ಈ ಜಿಲ್ಲೆಯಲ್ಲಿ ಕಾಫಿ ಬಹಳವಾಗಿ ಬೆಳೆಯಲಾಗುತ್ತದೆಯಲ್ಲದೆ ಕರಿಮೆಣಸು,ಏಲಕ್ಕಿ,ಕಿತ್ತಳೆ,ಮತ್ತು ಭತ್ತ ಪ್ರಮುಖ ಬೇಸಾಯ.ಒಂದು ಕಾಲದಲ್ಲಿ ಕೊಡಗಿನ ಕಿತ್ತಳೆ ಭಾರತದಲ್ಲೆ ಹೆಸರಾಗಿತ್ತು.ಅದರೆ ಇಂದು ಅದು ಕೊಡಗಿನಲ್ಲಿಯೆ ಅಪರೂಪವಾಗಿದೆ.ಮೊದಲು ಕೊಡಗಿನಿಂದ ಕರ್ನಾಟಕ ರಾಜ್ಯಕ್ಕೆ ೧/೩ ಪಾಲು ಆದಾಯ ತೆರಿಗೆಯಾಗಿ ಹೋಗುತ್ತಿತ್ತು. ಇತಿಹಾಸ ಕನ್ನಡ ಕೊಡಗಿನಲ್ಲಿ ಪ್ರಮುಖವಾಗಿ ಬಳಸಲಾಗುವ ಭಾಷೆ ಹಾಗು ಆಡಳಿತ ಭಾಷೆ. ಇದಲ್ಲದೆ ಅರೆಭಾಷೆ, ಕೊಡವ ತಕ್ಕ್, ಮಲಯಾಳಂ,ತಮಿಳು, ತುಳು,ರಾವುಲ, ಮುಂತಾದವನ್ನು ಆಡುವವರು ಇಲ್ಲಿರುವರು. ಕೊಡವ ಭಾಷೆ ಅಥವಾ ಕೊಡವ ತಕ್ಕ್‌ 1370 AD ಯಿಂದ ದಾಖಲಿತ ಲಿಪಿಯನ್ನು ಹೊಂದಿದೆ, ಇದನ್ನು ಸುಮಾರು 1,50,000 ಜನರು ಮಾತನಾಡುತ್ತಾರೆ ಮತ್ತು 4,00,000 ಜನರು ವ್ಯವಹಾರ ಭಾಷೆಯಾಗಿ ಬಳಸುತ್ತಾರೆ, ಕೊಡಗಿನ 18 ಬುಡಕಟ್ಟು ಸಮುದಾಯಗಳು ಕೊಡವ ತಕ್ಕ್ ಮಾತನಾಡುತ್ತಾರೆ. ಯೆರವೆರು (ಅಥವಾ) ರಾವುಲರು, ಕೊಡಗಿನಲ್ಲಿ ಹಾಗೂ ಕೇರಳದಲ್ಲಿ (ಇಲ್ಲಿ ಆದಿಯರೆಂದು ಕರೆಯಲ್ಪಡುತ್ತಾರೆ) ಇದ್ದಾರೆ. ಇವರು ಪ್ರಮುಖವಾಗಿ ಹಿಂದೂಗಳು ಹಾಗೂ ವ್ಯವಸಾಯಗಾರರು. ಹೊರಗಿನ ಸಂಪರ್ಕಗಳು ಕೊಡವ ['ಕೊಡಗು-ಕೊಡವರ ಸಿರಿನಾಡು ಕಾವೇರಿಯ ತವರು'-ಯಶೋದಾ ಮುತ್ತಣ್ಣ, ತರಂಗ,೨೯ ಸೆಪ್ಟೆಂಬರ್,೨೦೧೬,ಪು.೧೪-೩೦ & ೫೧-೫೩,ಮಂಜು ಮುಸುಕಿದ ಕೊಡವ ನಾಡು-ಚಿತ್ರ.ಅನಿಲ್.ಎಚ್.ಟಿ.] ಉಲ್ಲೇಖ ಭೂಗೋಳ ಕರ್ನಾಟಕದ ಜಿಲ್ಲೆಗಳು ಕೊಡಗು ಜಿಲ್ಲೆ
1030
https://kn.wikipedia.org/wiki/%E0%B2%A7%E0%B2%BE%E0%B2%B0%E0%B2%B5%E0%B2%BE%E0%B2%A1
ಧಾರವಾಡ
ಧಾರವಾಡ ಕರ್ನಾಟಕ ರಾಜ್ಯದ ಒಂದು ನಗರ; ಧಾರವಾಡ ನಗರ ಧಾರವಾಡ ಜಿಲ್ಲೆಯ ಕೇಂದ್ರಸ್ಥಳ. ಕರ್ನಾಟಕದಲ್ಲಿ ಬೆಂಗಳೂರಿನ ನಂತರ ಎರಡನೇ ಅತಿ ದೊಡ್ಡ ನಗರ ಎಂದರೆ ಧಾರವಾಡ ನಗರ, ಹುಬ್ಬಳ್ಳಿ ವಾಣಿಜ್ಯ ನಗರವಾದರೆ ಧಾರವಾಡ ಶೈಕ್ಷಣಿಕ ಜಿಲ್ಲೆ, ಧಾರವಾಡ ಅತಿ ತಂಪು ವಾತಾವರಣ ಹೊಂದಿರುವ ನಗರ, ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಆಕಾಶವಾಣಿ, ಕಾನೂನು ವಿಶ್ವವಿದ್ಯಾಲಯ, ಹೈಕೋರ್ಟ್, ನೈರುತ್ಯ ರೈಲ್ವೆ ಘಟಕ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ, ಐ ಐ ಟಿ ,ಮುಂತಾದವುಗಳ ಆಗರ ಧಾರವಾಡ, ಧಾರವಾಡ’ದ ಮೂಲ ರೂಪ ‘ದಾರವಾಡ’. ಬಹಳಷ್ಟು ಚರ್ಚಿತವಾಗಿರುವ ಧಾರವಾಡ ಗ್ರಾಮದ ನಿಪ್ಪತ್ತಿಯು ಸಹ ವ್ಯಕ್ತಿನಾಮದ್ದಾಗಿರುವ ಸಾಧ್ಯತೆ ಹೆಚ್ಚಿದೆ. ಧಾರವಾಡ ಜಿಲ್ಲಾ ಗೆಝೆಟಿಯರ್‍ದಲ್ಲಿ ವಿಜಯನಗರದ ರಾಮರಾಜನ ಕಾಲದ ಧಾರರಾವ್ ಎಂಬುವನು ೧೪೦೩ರಲ್ಲಿ ಕೋಟೆ ಕಟ್ಟಿಸಿದ್ದರ ನಿಮಿತ್ತ ಈ ಊರಿಗೆ ಧಾರವಾಡ ಎಂಬ ಹೆಸರು ಬಂದಿತೆಂದು ತಿಳಿಸುತ್ತದೆ. ಆದರೆ ಕ್ರಿ.ಶ.೧೧೧೭ ಧಾರವಾಡ ಶಾಸನದಲ್ಲಿಯೇ ‘ದಾರವಾಡ’ ಎಂಬ ಹೆಸರು ಬಳಕೆಗೊಂಡಿದೆ ಇತಿವೃತ್ತ ಇದಕ್ಕೆ ಸಹಾಯಕವಾಗಿ ಕ್ರಿ.ಶ.೧೧೨೫ ನರೇಂದ್ರ ಮತ್ತು ೧೧೪೮ ಧಾರವಾಡ ಶಾಸನಗಳಲ್ಲೂ ಕ್ರಮವಾಗಿ ದಾರವಾಡ ಮತ್ತು ಧಾರವಾಡ ಬಳಕೆಗೊಂಡಿವೆ. ಅಲ್ಲದೆ ೧೪೦೩ರಲ್ಲಿ ರಾಮರಾಯ ವಿಜಯನಗರವನ್ನು ಆಳುತ್ತಿರಲಿಲ್ಲ. ಇವೆಲ್ಲ ಕಾರಣಗಳಿಂದ ಈ ವಾದವನ್ನು ಒಪ್ಪಲಿಕ್ಕಾಗದು. ಡಾ. ಪಿ.ಬಿ. ದೇಸಾಯಿ ಧಾರವಾಡ ಪದವು ಸಂಸ್ಕೃತದ ‘ದ್ವಾರ’ದಿಂದ ‘ದಾರ’ ಮತ್ತು ‘ವಾಟ’ ದಿಂದ ‘ವಾಡ’ ಬಂದಿದೆ ಎನ್ನುತ್ತಾರೆ. ಡಾ. ಎಂ.ಎಂ. ಕಲಬುರ್ಗಿ ಅವರು ವಾದವನ್ನು ಒಪ್ಪುವುದಿಲ್ಲ. ಸಾಮಾನ್ಯವಾಗಿ ಊರ ಹೆಸರನ್ನು ಇಷ್ಟರಮಟ್ಟಿಗೆ ಸಂಸ್ಕೃತ ಭೂಯಿಷ್ಠವಾಗಿ ಇಡುವುದು ಅಸಂಭವ. ಅಲ್ಲದೆ ಅಲ್ಲಿ ಸುಂಕವನ್ನು ಆಕರಿಸಲಾಗುತ್ತಿತ್ತು ಎಂಬ ಕಾರಣಕ್ಕೆ ಇದೊಂದೇ ಪ್ರದೇಶದ ಮೂಲಕ ಎರಡು ವಿಶಾಲ ಪ್ರದೇಶಗಳ ಸುಂಕವನ್ನು ಆಕರಿಸಲಾಗುತ್ತಿತ್ತೆಂದಲ್ಲ. ಸುಂಕ ಸಂಗ್ರಹ ಸಾಮಾನ್ಯವಾಗಿ ಅಂದು ಎಲ್ಲಾ ಗ್ರಾಮಗಳಲ್ಲಿ ಕಂಡುಬರುವಂತಹದ್ದಾಗಿ ಸಾಮಾನ್ಯವಾಗಿ ಅಂದು ಎಲ್ಲಾ ಗ್ರಾಮಗಳಲ್ಲಿ ಕಂಡುಬರುವಂತಹದ್ದಾಗಿತ್ತು ಎಂಬ ಡಾ. ಕಲಬುರ್ಗಿ ಅವರ ವಿಚಾರಗಳನ್ನು ಒಪ್ಪುವಂತಹದ್ದೆ. ಡಾ. ಎಂ.ಎಂ. ಕಲಬುರ್ಗಿ ಅವರು ಧಾರವಾಡ ಪದದ ಪೂರ್ವಪದದ ಅಂತ್ಯ ‘ರ’ ಕಾರವುಳ್ಳ ಈ ಪದವು ಜನಾಂಗಿ ಸೂಚಿಯಾಗಿದೆ ಎಂದು ತಿಳಿಸುತ್ತಾ ದಾಯರ, ದಾರರ, ದಾವರ ಇವುಗಳಲ್ಲಿ ಒಂದರ ಸವೆದ ರೂಪ ‘ದಾರ’ ಎಂದು ತಿಳಿಸುತ್ತಾರೆ. ಹೀಗಾಗಿ ದಾಯರು, ದಾರರು, ದಾವರು ಇವುಗಳಲ್ಲಿ ಒಂದು ಜನಾಂಗದ ನೆಲೆ ಆಗಿರಬಹುದೆನ್ನುತ್ತಾರೆ. ಇನ್ನು ಉತ್ತರ ಪದ ‘ವಾಡ’ ದ್ರಾವಿಡದ ‘ಬಾಡ’ದಿಂದ ಬಂದಿರುವ ಸಾಧ್ಯತೆಯನ್ನು ತಿಳಿಸುತ್ತಾರೆ. ಡಾ. ಎಂ.ಎಂ. ಕಲಬುರ್ಗಿ ಅವರು ತಿಳಿಸುವ ದಾಯರ, ದಾರರ, ದಾವರ ಎನ್ನುವ ಜನಾಂಗಗಳಿದ್ದವು ಎನ್ನುವುದರ ಬಗ್ಗೆ ನಮಗೆ ಯಾವುದೇ ರೀತಿಯ ಕುರುಹುಗಳಿಲ್ಲ. ಹೀಗಾಗಿ ಧಾರವಾಡದ ಮೂಲ ತಿಳಿಸುವ ಅವರ ಜನಾಂಗ ನಿಷ್ಠೆ ಅಭಿಪ್ರಾಯ ಸರಿಯೆನಿಸುವುದಿಲ್ಲ. ಆದ್ದರಿಂದ ಧಾರವಾಡ ಗ್ರಾಮನಾಮದ ನಿಷ್ಪತ್ತಿಯನ್ನು ಜನಾಂಗವಾಚಿಗಿಂತ ವ್ಯಕ್ತಿವಾಚಿಯಲ್ಲಿ ಹುಡಕಲು ಆಧಾರ ಒಂದು ದೊರೆಯುತ್ತದೆ. ‘ಸಾಮಾನ್ಯವಾಗಿ ಇಂದಿಗೂ ಜನಬಳಕೆಯಲ್ಲಿ ಮೇಲೆ, ಮ್ಯಾಲೆ ಎಂಬ ಪದಬಳಕೆಯುಂಟು. ಮೇಲೆ ಗ್ರಾಂಥಿಕವಾದರೆ, ಮ್ಯಾಲೆ ಮೌಖಿಕವಾದದು. ಅದರಂತೆ ದೇರಣ್ಣ> ದ್ಯಾವಣ್ಣ, ದೇಮಪ್ಪ> ದ್ಯಾಮಪ್ಪ ನಾಮಗಳ ಬಳಕೆಯುಂಟು, ಇಂಥ ಯಾವುದೋ ವ್ಯಕ್ತಿಯೋರ್ವನ ಹೆಸರೇ ಧಾರವಾಡ ಗ್ರಾಮಕ್ಕೆ ಆದಿಯಾಗಿರಬೇಕು. ಇದಕ್ಕೆ ಸಹಾಯಕವಾಗಿ ಸುಮಾರು 9ನೇ ಶತಮಾನದ ಧಾರವಾಡದ ಒಂದು ವೀರಗಲ್ಲು ಶಾಸನದಲ್ಲಿ ದೇರಣ್ಣ ಎಂಬ ವ್ಯಕ್ತಿಯ ಉಲ್ಲೇಖ ಕಂಡುಬರುತ್ತದೆ. ಪ್ರಾಯಶಃ ಆತನೇ ವೀರಮರಣ ಹೊಂದಿದ ವ್ಯಕ್ತಿಯಾಗಿರಬೇಕು. ಶಾಸನ ಅಧಿಕ ತ್ರುಟಿತವಿದೆ. ಆ ದೇರಣ್ಣ ಹೆಸರು ಧಾರವಾಡದ ಮೂಲ ನಿಷ್ಪತ್ತಿಯಾಗಿರಬೇಕು. ಅಂದರೆ ಧಾರವಾಡ ಪದದ ನಿರ್ದಿಷ್ಟ ಪದವಾಗಿರಬೇಕು. ಇನ್ನು ವಾರ್ಗಿಕ ಡಾ. ಎಂ.ಎಂ. ಕಲಬುರ್ಗಿಯವರು ತಿಳಿಸುವಂತೆ ಬಾಡದಿಂದಲೇ ಬಂದಿರಬೇಕು. ದೇರಣ್ಣಬಾಡ> ದ್ಯಾರಣ್ಣಬಾಡ> ದಾರನಬಾಡ> ದಾರವಾಡ> ಧಾರವಾಡ ಆಗಿರುವ ಸಾಧ್ಯತೆ ಹೆಚ್ಚಾಗಿದೆ’. ಭಾಷಾ ಹಿನ್ನೆಲೆಯಲ್ಲಿ ಇದು ಸರಿಯಾದ ಕ್ರಮವಾಗಿದೆ. ಇನ್ನು ಧಾರವಾಡವನ್ನು ಸಂಸ್ಕೃತಿ ನೆಲೆಯಲ್ಲಿ ತುಂತುಪುರಿ, ಧಾರಾನಗರಿ ಎಂದು ಹೆಸರಿಸಿದ್ದುಂಟು. ಮುಸ್ಲಿಂ ಆಡಳಿತ ಕಾಲದಲ್ಲಿ ‘ನಸ್ರತಾಬಾದ್’, ಬ್ರಿಟಿಷರ ಆಡಳಿತದಲ್ಲಿ ‘ಧಾರವಾರ’ ಎಂದು ಕರೆಸಿಕೊಂಡಿತ್ತು ಈಗ ಮತ್ತೆ ಧಾರವಾಡ ಆಗಿದೆ. ಡಾ. ಎಂ.ಎಂ. ಕಲಬುರ್ಗಿ ಅವರು ತಿಳಿಸುವಂತೆ ಗ್ರಾಮನಾಮದ ಪೂರ್ವಪದದ ಅಂತ್ಯದಲ್ಲಿ ಲಾ.ಳ.ಬ್ಬೆ.ಕ್ಕ ಇವು ಬಂದಿದ್ದರೆ ಅವು ಸ್ತ್ರೀವಾಚಿ ಸ್ಥಳನಾಮಗಳಾಗಿರುತ್ತವೆ. ಚರಿತ್ರೆ ಪುರಾಣ ಕಾಲದಲ್ಲಿ ಪಾಂಡವರು ಹಾನಗಲ್ ನಲ್ಲಿ ವಾಸ್ತವ್ಯ ಹೂಡಿದ್ದರು ಎಂಬಲ್ಲಿಂದ ಧಾರವಾಡದ ಚರಿತ್ರೆ ಪ್ರಾರಂಭವಾಗುತ್ತದೆ. ತಾಮ್ರ ಶಾಸನಗಳ ಪ್ರಕಾರ ಧಾರವಾಡವು ಬನವಾಸಿ ಯ ಕದಂಬರ ಆಳ್ವಿಕೆ ಒಳಪಟ್ಟಿತ್ತು ಎಂದು ತಿಳಿದು ಬರುತ್ತದೆ.ಅನಂತರದ ಚರಿತ್ರೆಯಂತೆ ಕ್ರಿ.ಶ. ಏಳನೆಯ ಶತಮಾನದಲ್ಲಿ ಚಾಲುಕ್ಯ ರು, ಕ್ರಿ.ಶ. ಒಂಭತ್ತನೆಯ ಶತಮಾನದಲ್ಲಿ ರಾಷ್ಟ್ರಕೂಟ ರು, ಹನ್ನೆರಡನೆಯ ಶತಮಾನದಲ್ಲಿ ದೇವಗಿರಿಯ ಯಾದವರು ಆಳ್ವಿಕೆ ಮಾಡಿದರು.೧೨ ನೇ ಶತಮಾನದ ವರೆಗೆ ಧಾರವಾಡ ಜಿಲ್ಲೆ ಚಾಲುಕ್ಯ ಸಾಮ್ರಾಜ್ಯದ ಭಾಗವಾಗಿದ್ದಿತು. ನಂತರ ವಿಜಯನಗರ ಸಾಮ್ರಾಜ್ಯದ ಭಾಗವಾಯಿತು. ವಿಜಯನಗರ ಸಾಮ್ರಾಜ್ಯದ ಪತನದ ನಂತರ ಬಿಜಾಪುರದ ಆದಿಲ್ ಶಾಹಿ ಸುಲ್ತಾನರ ಕೈ ಸೇರಿದ ಮೇಲೆ ಧಾರವಾಡ ಜಿಲ್ಲೆಯ ಪ್ರಾಮುಖ್ಯತೆ ಹೆಚ್ಚಿತು. ಇದಕ್ಕೆ ಮುಖ್ಯ ಕಾರಣ ಆದಿಲ್ ಶಾಹಿ ಸುಲ್ತಾನರು ಇಲ್ಲಿ ಕಟ್ಟಿಸಿದ ಕೋಟೆ -ಮಣ್ಣಕಿಲ್ಲೆ- ಇದಕ್ಕೆ ಆಗಿನ ಕಾಲದಲ್ಲಿ ನಜರತಾಬಾದ್ ಎಂಬ ಹೆಸರಿತ್ತು. ಆದಿಲ್ ಶಾಹಿ ಸುಲ್ತಾನರ ನಂತರ ಧಾರವಾಡ ಜಿಲ್ಲೆ ಸ್ವಲ್ಪ ಕಾಲ ಮುಘಲ್ ಸಾಮ್ರಾಜ್ಯದ ಕೈಯಲ್ಲಿದ್ದು ನಂತರ ಅನುಕ್ರಮವಾಗಿ ಮರಾಠರು, ಹೈದರ್ ಅಲಿ ಮತ್ತು ಟೀಪು ಸುಲ್ತಾನ್ ಹಾಗೂ ಬ್ರಿಟಿಷರ ಕೈ ಸೇರಿತು. ಮುಂಬಯಿ ಸರ್ಕಾರದ ಆಡಳಿತದಲ್ಲಿದ್ದ ಧಾರವಾಡ, ಕರ್ನಾಟಕ ಏಕೀಕರಣ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿತು. ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಿದ್ಯಾರ್ಥಿ ಸಂಘಟನೆ ಅಖಿಲ ಕರ್ನಾಟಕ ವಿದ್ಯಾರ್ಥಿ ಪರಿಷತ್ತುಸ್ಥಾಪಿಸಿ, ರಾಜ್ಯಾದಂತ್ಯ ಕರ್ನಾಟಕ ಏಕೀಕರಣ ಹೋರಾಟದ ಪರವಾಗಿ ವಿದ್ಯಾರ್ಥಿಗಳನ್ನು ಸಂಘಟಿಸಿದವರು ಅನ್ನದಾನಯ್ಯ ಪುರಾಣಿಕ. ಹುಬ್ಬಳ್ಳಿಯಲ್ಲಿ ಕರ್ನಾಟಕ ಏಕೀಕರಣದ ಕುರಿತು ಅಂತಿಮ ತೀರ್ಮಾನ ಮಾಡಲು ನಿಜಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಕೆ.ಪಿ.ಸಿ.ಸಿ ಸಭೆ ನೆಡೆಯುವಾಗ, ಇವರು ನೆಡೆಸಿದ ಬೃಹತ್ ವಿದ್ಯಾರ್ಥಿ ಮೆರವಣಿಗೆ, ಕೆಪಿಸಿಸಿ ಸಭೆಯು ಕರ್ನಾಟಕ ಏಕೀಕರಣದ ಪರವಾಗಿ ನಿರ್ಧಾರ ಮಾಡಲು ಪ್ರಮುಖ ಕಾರಣವಾಗಿತ್ತು. ತಾಲೂಕುಗಳು ಧಾರವಾಡ ಜಿಲ್ಲೆಯು 8 ಕಂದಾಯ ತಾಲೂಕುಗಳನ್ನು ಹೊಂದಿದೆ ಧಾರವಾಡ ತಾಲೂಕು ಅಳ್ನಾವರ ತಾಲೂಕು ಹುಬ್ಬಳ್ಳಿ ಗ್ರಾಮೀಣ ತಾಲೂಕು ಹುಬ್ಬಳ್ಳಿ ಶಹರ ತಾಲೂಕು ಕುಂದಗೋಳ ತಾಲೂಕು ನವಲಗುಂದ ತಾಲೂಕು ಅಣ್ಣಿಗೇರಿ ತಾಲೂಕು ಕಲಘಟಗಿ ತಾಲೂಕು ಪ್ರಮುಖ ವ್ಯಕ್ತಿಗಳು ಕರ್ನಾಟಕಕ್ಕೆ ಧಾರವಾಡ ಜಿಲ್ಲೆಯ ಪ್ರಮುಖ ಕೊಡುಗೆ ಇಲ್ಲಿ ಹುಟ್ಟಿ ಬೆಳೆದಿರುವ ಅನೇಕ ಸಂಗೀತಗಾರರು ಮತ್ತು ಸಾಹಿತಿಗಳು. ಧಾರವಾಡದ ಕೆಲವು ಪ್ರಮುಖ ಗಣ್ಯ ವ್ಯಕ್ತಿಗಳನ್ನು ಕೆಳಗೆ ಕಾಣಿಸಲಾಗಿದೆ. ಧಾರವಾಡದ ಮುರುಘಾ ಮಠ ಮತ್ತು ಲಿಂ.ಮೃತ್ಯುಂಜಯ ಸ್ವಾಮಿಗಳು ಹಾಗೂ ದಿ. ಮಹಾಂತಪ್ಪಗಳು ವಿಶ್ವ ಪ್ರಸಿದ್ಧ. ಇಲ್ಲಿದ್ದು ವಿದ್ಯಾಭ್ಯಾಸ ಮಾಡಿದವರಲ್ಲಿ ಹಲವಾರು ಜನರು ಗಣ್ಯವ್ಯಕ್ತಿಗಳು, ಸಾಹಿತಿಗಳು, ಅಧಿಕಾರಿಗಳು ಆಗಿದ್ದಾರೆ. ಸಂಗೀತ-ಕಲೆ-ಶಿಕ್ಷಣ-ಭಕ್ತಿಯ ನಿರಂತರ ದಾಸೋಹ ಈ ಮಠದಲ್ಲಿ ಸ್ವಾತಂತ್ರ್ಯಪೂರ್ವದಿಂದಲೂ ನಡೆಯುತ್ತಿರುವುದು ಇಲ್ಲಿ ವಿಶೇಷವಾಗಿದೆ. ಸಂಗೀತಗಾರರು ಹಿಂದುಸ್ತಾನಿ ಸಂಗೀತ ಪದ್ಧತಿ ಧಾರವಾಡದಲ್ಲಿ ಆಳವಾಗಿ ಬೇರೂರಿದೆ. ಧಾರವಾಡದಿಂದ ಅನೇಕ ಗಣ್ಯ ಹಿಂದುಸ್ತಾನಿ ಸಂಗೀತಗಾರರು ಬೆಳಕಿಗೆ ಬಂದಿದ್ದಾರೆ. ಪಂಡಿತ್ ಭೀಮಸೇನ್ ಜೋಷಿ ಪಂಡಿತ್ ಮಲ್ಲಿಕಾರ್ಜುನ ಮನ್ಸೂರ್ ಪಂಡಿತ್ ಬಸವರಾಜ ರಾಜಗುರು ಗಂಗೂಬಾಯಿ ಹಾನಗಲ್ ಕುಮಾರ ಗಂಧರ್ವ ಸಂಗೀತಾ ಕಟ್ಟಿ (ಸುಗಮ ಸಂಗೀತ) ಕೈವಲ್ಯ ಗುರವ ಮಾಧವ ಗುಡಿ ಪ್ರವೀಣ್ ಗೋಡ್ಖಿಂಡಿ(ಕೊಳಲು ವಾದನ) ಗೀತಾ ಜಾವಡೇಕರ ಸಾಹಿತಿಗಳು ಕನ್ನಡ ಸಾಹಿತ್ಯಕ್ಕೆ ಧಾರವಾಡ ಜಿಲ್ಲೆಯ ಕೊಡುಗೆ ಅಪಾರ. ಕನ್ನಡ ಸಾಹಿತ್ಯದ ಅನೇಕ ದಿಗ್ಗಜರ ಕರ್ಮಭೂಮಿ ಧಾರವಾಡ. ಧಾರವಾಡ ಜಿಲ್ಲೆಯಲ್ಲಿ ಜನಿಸಿದ ಅಥವಾ ನೆಲೆಸಿದ ಮಹತ್ವದ ಸಾಹಿತಿಗಳ ಹೆಸರುಗಳನ್ನು ಇಲ್ಲಿ ಕೊಡಲಾಗುತ್ತಿದೆ: ದ.ರಾ.ಬೇಂದ್ರೆ ಆನಂದಕಂದ(ಬೆಟಗೇರಿ ಕೃಷ್ಣಶರ್ಮ) ಆರ್.ಸಿ.ಹಿರೇಮಠ ಆರ್ಯ ಆಚಾರ್ಯ ಆಲೂರು ವೆಂಕಟರಾಯರು ಉತ್ತಂಗಿ ಚನ್ನಪ್ಪ ಎಂ.ಎಂ.ಕಲಬುರ್ಗಿ ಎಂ.ಜೀವನ ಎಂ.ಡಿ.ಗೋಗೇರಿ ಎನ್.ಕೆ.ಕುಲಕರ್ಣಿ ಎಸ್.ಶೆಟ್ಟರ್ ಎಸ್.ಸಿ.ನಂದೀಮಠ ರೆವೆರೆಂಡ ಕಿಟ್ಟೆಲ್ ಕೀರ್ತಿನಾಥ ಕುರ್ತಕೋಟಿ ಗದಿಗೆಯ್ಯ ಹುಚ್ಚಯ್ಯ ಹೊನ್ನಾಪುರಮಠ ಗಿರಡ್ಡಿ ಗೋವಿಂದರಾಜ ಗಿರೀಶ ಕಾರ್ನಾಡ ಗೀತಾ ಕುಲಕರ್ಣಿ ಚಂದ್ರಶೇಖರ ಕಂಬಾರ ಚಂದ್ರಶೇಖರ ಪಾಟೀಲ ಚನ್ನವೀರ ಕಣವಿ ಚೆನ್ನಕ್ಕಾ ಪಾವಟೆ (ಎಲಿಗಾರ) ಜ.ಚ.ನಿ ಜಿ.ಎಸ್.ಆಮೂರ ಜಿ.ಬಿ.ಜೋಶಿ ಜಿ.ವಿ.ಕುಲಕರ್ಣಿ ದ.ಬಾ.ಕುಲಕರ್ಣಿ ದಮಯಂತಿ ನರೇಗಲ್ ಧೋಂಡೊ ನರಸಿಂಹ ಮುಳಬಾಗಲ ನಾ.ಶ್ರೀ.ರಾಜಪುರೋಹಿತ ಪಂಚಾಕ್ಷರಿ ಹಿರೇಮಠ ಪಾ.ವೆಂ.ಆಚಾರ್ಯ(ಲಾಂಗೂಲಾಚಾರ್ಯ) ಪಾಟೀಲ ಪುಟ್ಟಪ್ಪ ಪಿ.ಬಿ.ಕಲ್ಲಾಪುರ ಪಿ.ಬಿ.ದೇಸಾಯಿ ಬಸವರಾಜ ಕಟ್ಟೀಮನಿ ಭಾಲಚಂದ್ರ ಘಾಣೇಕರ ಮಂದಾಕಿನಿ ಪುರೋಹಿತ ಮನೋಹರ ಭಾಲಚಂದ್ರ ಘಾಣೇಕರ ಮಾತೆ ಮಹಾದೇವಿ ಮಾಲತಿ ಪಟ್ಟಣಶೆಟ್ಟಿ ಮೇವುಂಡಿ ಮಲ್ಲಾರಿ ಮೋಹನ ನಾಗಮ್ಮನವರ ರಂಗನಾಥ ದಿವಾಕರ ರಾ.ಹ.ದೇಶಪಾಂಡೆ ರಾಘವೇಂದ್ರ ಖಾಸನೀಸ ರಾಜಶೇಖರ ಭೂಸನೂರುಮಠ ರಾಜೀವ ದೇಶಪಾಂಡೆ ರಾವಬಹಾದ್ದೂರ(ಆರ್.ಬಿ.ಕುಲಕರ್ಣಿ) ರೆವೆರಂಡ ಕಿಟ್ಟಲ್ ರೊದ್ದ ಶ್ರೀನಿವಾಸರಾವ್ ಲಲಿತಾಂಬ ವೃಷಭೇಂದ್ರಸ್ವಾಮಿ ಲೋಹಿತ ನಾಯ್ಕರ ವರದರಾಜ ಹುಯಿಲಗೋಳ ವಿ.ಕೃ.ಗೋಕಾಕ ವಿ.ಸಿ.ಐರಸಂಗ ವಿನೀತ ರಾಮಚಂದ್ರರಾಯರು ವೀಣಾ ಶಾಂತೇಶ್ವರ ವ್ಯಾಸ ದೇಶಪಾಂಡೆ ಶಂ.ಬಾ.ಜೋಶಿ ಎಂ.ಎಲ್. ಏಣಗಿ ಶಂಕರ ಮೊಕಾಶಿ ಪುಣೇಕರ ಶಾಂತಾದೇವಿ ಕಣವಿ ಶಾಂತಾದೇವಿ ಮಾಳವಾಡ ಶುಭದಾ ಅಮಿನಭಾವಿ ಶೈಲಾ ಛಬ್ಬಿ ಶ್ಯಾಮಲಾದೇವಿ ಬೆಳಗಾವಿ ಶ್ರೀರಂಗ ಸಂ.ಶಿ.ಭೂಸನೂರುಮಠ ಸರೋಜಿನಿ ಮಹಿಷಿ ಸಾಲಿ ರಾಮಚಂದ್ರರಾಯರು ಸಿದ್ಧಲಿಂಗ ಪಟ್ಟಣಶೆಟ್ಟಿ ಸುಕನ್ಯಾ ಮಾರುತಿ ಸುದರ್ಶನ ದೇಸಾಯಿ ಸುನಂದಾ ಬೆಳಗಾಂವಕರ ಸುಮಿತ್ರಾ ಹಲವಾಯಿ ಸೋಮಶೇಖರ ಇಮ್ರಾಪೂರ ಹನುಮಾಕ್ಷಿ ಗೋಗಿ ಹೇಮಲತಾ ಮಹಿಷಿ ಹೇಮಾ ಪಟ್ಟಣಶೆಟ್ಟಿ ದುರ್ಗಾದಾಸ್ ಕೆ.ಆರ್. ಡಾ. ಸಿದ್ಧರಾಮ ಕಾರಣಿಕ ಡಾ. ಎಸ್. ಆರ್. ಗುಂಜಾಳ ಡಾ. ಎಸ್. ಎಂ. ವೃಷಭೇಂದ್ರಸ್ವಾಮಿ ಶಿಕ್ಷಣ ತಜ್ಞರು ಪ್ರೊ.ಡಿ.ಸಿ.ಪಾವಟೆ ಮೂಲತಃ ಬೆಳಗಾವಿ ಜಿಲ್ಲೆಯವರಾದ ಶ್ರೀ ಡಿ.ಸಿ. ಪಾವಟೆಯವರು ಗಣಿತ ಶಾಸ್ತ್ರದಲ್ಲಿ ಕೇಂಬ್ರಿಜ್ ವಿಶ್ವವಿದ್ಯಾಲಯದಿಂದ Rangler ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಇವರು ಸಲ್ಲಿಸಿದ ಸೇವೆ ಅವಿಸ್ಮರಣೀಯವಾದದ್ದು. ನಡಕಟ್ಟಿ ಶಿವಶಂಕರ ಹಿರೇಮಠ ಕಂಪ್ಯೂಟರ್ ವಿಜ್ಞಾನ ಉದ್ಯಮಿಗಳು ಉಮೇಶ ವೈದ್ಯಮಠ ಸಾಮಾಜಿಕ ಕಾರ್ಯಕರ್ತರು ಶ್ರೀ ಬಿ ಡಿ ಹಿರೇಮಠ (ಸಾಮಾಜಿಕ ಚಟುವಟಿಕೆಗಳು,ಹೈಕೋರ್ಟ್) ಶ್ರೀ ಹರ್ಷವರ್ಧನ್ ಶೀಲವಂತ್ (ಪರಿಸರವಾದಿ) ಶ್ರೀ ಕಿರಣ್ ಹಿರೇಮಠ (ಸಾಮಾಜಿಕ ಚಟುವಟಿಕೆಗಳು) ಶ್ರೀ ದತ್ತ ಕುಲಕರ್ಣಿ (ಸಾಮಾಜಿಕ ಚಟುವಟಿಕೆಗಳು, ಐ ಐ ಟಿ) ಶ್ರೀ ಬಸವರಾಜ ಎಚ್ ಕೊರವರ (ಸಾಮಾಜಿಕ ಚಟುವಟಿಕೆಗಳು, ಜನಜಾಗೃತಿ ಸಂಘ) ಕಲಾಕಾರರು ಧಾರವಾಡದಲ್ಲಿ ಬೆಳೆದ ಸಿನೆಮಾ ತಾರೆಯರು ದಾಮಿನಿ, ಸುರೇಶ ಹೆಬ್ಳೀಕರ್ ಲೀನಾ ಚಂದಾವರ್ಕರ ಮತ್ತು ಮಮತಾ ಕುಲಕರ್ಣಿ. 'ಕುಂಚ ಬ್ರಹ್ಮ' ಹಾಲಭಾವಿಯವರು ಪ್ರಸಿದ್ಧ ಕಲಾವಿದರಾಗಿದ್ದಾರೆ. 'ರಂಗಭೂಮಿ ಕಲಾವಿದರು' ಎನ್ ಬಸವರಾಜ (ಗುಡಗೇರಿ) ಗುಬ್ಬಿವಿರಣ್ಣ ಪ್ರಶಸ್ತಿ ವಿಜೇತ ಎಮ್.ಎಸ್.ಕೊಟ್ರೇಶ್ (ಪ್ರಸ್ತುತ ಕನ್ನಡ ರಂಗಭೂಮಿಯಲ್ಲಿ ಸಕ್ರೀಯರಾಗಿದ್ದಾರೆ.) ಶ್ರೀಮತಿ. ನಾಗರತ್ನಮ್ಮ. ಹೊಸಮನಿ ಯಶವಂತ ಸರದೆಶಪಾಂಡೆ (ಆಲ್ ದಿ ಬೆಸ್ಟ್ ಪ್ರಸಿಧಿ) ಮಾಲತಿ ಸರದೆಶಪಾಂಡೆ ‍ ಶ್ರೀಕೃಷ್ಣ ಸಂಪಗಾಂವಕರ್ ಅವಿನಾಶ್ ಕಾಮತ್ (ಪ್ರಸ್ತುತ ಮುಂಬಯಿ ಕನ್ನಡ ರಂಗಭೂಮಿಯಲ್ಲಿ ಸಕ್ರೀಯರಾಗಿದ್ದಾರೆ.) ಬಸವರಾಜ ಮನಸೂರ ಚಿತ್ರ ಕಲಾವಿದರಲ್ಲಿ ಪ್ರಮುಖರು- ಎಂ ಆರ್ ಬಾಳಿಕಾಯಿ ಸಿ ಡಿ ಜೆಟ್ಟೆಣ್ಣವರ ಎಂ ಜೆ ಬಂಗ್ಲೇವಾಲೇ ಶೇಖರ ಬಳ್ಳಾರಿ. ಸತೀಶ ಪೂಜಾರಿ ಶಂಕರ್ ಕೆ ವಿ. ವಿಜಯಲಕ್ಶ್ಮಿ ಯಾವಗಲ್ ಸುನಿಲ್ ಪುರಾನಿಕ್ ಜನಸಂಖ್ಯೆ ೨೦೧೧ರ ಜನಗಣತಿಯಂತೆ ಜಿಲ್ಲೆಯ ಜನಸಂಖ್ಯೆ ೧೮,೪೭,೦೨೩ ಆಗಿದ್ದು, ಇದರಲ್ಲಿ ಪುರುಷರು ೯,೩೭,೨೦೬ ಮತ್ತು ಮಹಿಳೆಯರು ೯,೦೯,೮೧೭ ಆಗಿದೆ. ಜಿಲ್ಲೆಯ ವಿಸ್ತೀರ್ಣ ೪೨೬೦ ಕಿ.ಮೀ ವಿಸ್ತೀರ್ಣ ಹೊಂದಿದ್ದು ಜನಸಾಂದ್ರತೆ ೪೩೪ ಪ್ರತೀ ಕಿ.ಮೀ,ಗೆ ಇರುತ್ತದೆ. ಚಾರಿತ್ರಿಕ ಘಟನೆಗಳು ಧಾರವಾಡ ನಗರದ ಕೆಲವು ಸಾಂಸ್ಕೃತಿಕ ಹಾಗೂ ಸಾಮಾಜಿಕ ಚಾರಿತ್ರಿಕ ಘಟನೆಗಳು ಇಂತಿವೆ: ೧೮೧೮---ಬ್ರಿಟಿಷ್ ಆಡಳಿತ ಪ್ರಾರಂಭ. ೧೮೨೪---ಧಾರವಾಡ ಜಿಲ್ಲಾ ಕಲೆಕ್ಟರ ಥ್ಯಾಕರೆ ಕಿತ್ತೂರು ಕಿತ್ತೂರು ಚೆನ್ನಮ್ಮಇವಳ‍ ವಿರುದ್ಧ ನಡೆಸಿದ ದಾಳಿಯಲ್ಲಿ ಗುಂಡೇಟಿನಿಂದ ಮೃತನಾದನು. ೧೮೨೬---ಪ್ರಥಮ ಮರಾಠಿ ಶಾಲೆ ಪ್ರಾರಂಭ. ೧೮೩೦---ಸಿವಿಲ್ ಆಸ್ಪತ್ರೆ ನಿರ್ಮಾಣ ೧೮೩೧---ಪ್ರಥಮ ಕನ್ನಡ ಶಾಲೆಯ ಪ್ರಾರಂಭ ೧೮೩೬---ಬಾಸೆಲ್ ಮಿಶನ್ ಆಗಮನ ೧೮೪೦---ಕ್ಯಾಥೋಲಿಕ್ ಚರ್ಚ ನಿರ್ಮಾಣ ೧೮೪೪---ಮಾನಸಿಕ ಆರೋಗ್ಯ ಕೇಂದ್ರದ ಸ್ಥಾಪನೆ ೧೮೪೮---ಸರಕಾರಿ ಇಂಗ್ಲಿಷ್ ಶಾಲೆಯ ಸ್ಥಾಪನೆ ೧೮೪೯---ಶ್ರೀ ಗುರುನಾಥರಾವ ಪಾಠಕ ಇವರಿಂದ ‘ಸಂಸ್ಕೃತ ಪಾಠಶಾಲೆ’ಯ ಸ್ಥಾಪನೆ ೧೮೫೬---ನಗರಪಾಲಿಕೆ ಪ್ರಾರಂಭ ೧೮೬೧---ವೆಂಕಟ ರಂಗೊ ಕಟ್ಟಿ ಇವರಿಂದ ಕನ್ನಡದ ಪ್ರಥಮ ಮಾಸಿಕ ‘ಜ್ಞಾನಬೋಧಕ’ ಪ್ರಾರಂಭ ೧೮೬೩---ಬಾಸೆಲ್ ಮಿಶನ್ ಹಾಯ್‍ಸ್ಕೂಲ್ ಪ್ರಾರಂಭ ೧೮೬೫--- ಗಂಡುಮಕ್ಕಳ ಟ್ರೇನಿಂಗ ಕಾಲೇಜಿನಿಂದ ‘ವಾರಪತ್ರಿಕೆ’ ಪ್ರಾರಂಭ ೧೮೬೮---ಪ್ರಥಮ ಹೆಣ್ಣು ಮಕ್ಕಳ ಶಾಲೆ ಪ್ರಾರಂಭ ೧೮೭೯---ಕರ್ನಾಟಕ ಸಂಗೀತ ಶಾಲೆಯ ಪ್ರಾರಂಭ ೧೮೮೯---ರಾ.ಹ.ದೇಶಪಾಂಡೆಯವರಿಂದ ಕರ್ನಾಟಕ ವಿದ್ಯಾವರ್ಧಕ ಸಂಘ ಪ್ರಾರಂಭ ೧೮೯೨---ಪರಿವ್ರಾಜಕ ಸ್ವಾಮಿ ವಿವೇಕಾನಂದರ ಭೇಟಿ ೧೮೯೫---ಹೆಣ್ಣುಮಕ್ಕಳ ಟ್ರೇನಿಂಗ ಕಾಲೇಜ ಪ್ರಾರಂಭ ೧೮೯೬---ವಾಗ್ಭೂಷಣ ಪತ್ರಿಕೆಯ ಪ್ರಾರಂಭ ೧೯೦೨---ಥಿಯಾಸೊಫಿಕಲ್ ಸೊಸಾಯಿಟಿ ಪ್ರಾರಂಭ ೧೯೦೭---ಲೋಕಮಾನ್ಯ ತಿಲಕರಿಂದ ಸಾರ್ವಜನಿಕ ಭಾಷಣ ೧೯೧೪---ಕರ್ನಾಟಕ ಪ್ರಾಚ್ಯ ಸಂಶೋಧನಾ ಕೇಂದ್ರ ಪ್ರಾರಂಭ ೧೯೧೫---ಲೋಕಮಾನ್ಯ ತಿಲಕರಿಂದ ಸಾರ್ವಜನಿಕ ಭಾಷಣ ೧೯೧೭---ಕರ್ನಾಟಕ ಕಾಲೇಜ ಸ್ಥಾಪನೆ ೧೯೨೦---ಮಹಾತ್ಮಾ ಗಾಂಧೀಜಿಯವರಿಂದ ಧಾರವಾಡದ ಭೆಟ್ಟಿ ೧೯೨೧---ಕರ್ನಾಟಕ ಶಿಕ್ಷಣ ಸಮಿತಿಯ ಕಾಲೇಜ ಪ್ರಾರಂಭ : ಜಕಣಿ ಭಾವಿಯ ಹತ್ತಿರ ಪೋಲೀಸ ಗೋಳೀಬಾರ, ಮೂವರು ಖಿಲಾಫತ್ ಚಳುವಳಿಗಾರರ ಮರಣ ; ಲಾಲಾ ಲಜಪತರಾಯ ಇವರ ಭೆಟ್ಟಿ ೧೯೨೨---ಕರ್ನಾಟಕ ಲಿಂಗಾಯತ ಶಿಕ್ಷಣ ಸಮಿತಿಯ ಪ್ರಾರಂಭ ೧೯೨೭---ಸೈಮನ್ ಕಮಿಶನ್ ವಿರುದ್ಧ ಪ್ರತಿಭಟನೆ, ಚಳುವಳಿ ೧೯೨೮---ಶ್ರೀ ನಾಡಿಗೇರ ಅವರಿಂದಮಲ್ಲಸಜ್ಜನ ವ್ಯಾಯಾಮಶಾಲೆಯ ಪ್ರಾರಂಭ ೧೯೩೦---ಉಪ್ಪಿನ ಸತ್ಯಾಗ್ರಹ:ರಂಗನಾಥ ದಿವಾಕರ‍ರ ಬಂಧನ. ಹುಕ್ಕೇರಿಕರ ರಾಮರಾವ, ಡಿ.ಪಿ.ಕರಮರಕರ, ನಾರಾಯಣರಾವ ಕಬ್ಬೂರ ಇವರಿಂದ ಬ್ರಿಟಿಷ್ ಧ್ವಜ ಅವರೋಹಣ. ೧೯೩೩---ಪ್ರಸಿದ್ಧ ನಾಟಕಕಾರ ಶ್ರೀರಂಗ‍ರಿಂದ ‘ಕರ್ನಾಟಕ ನಾಟ್ಯ ವಿಲಾಸಿ ಹವ್ಯಾಸಿ ನಾಟಕ ಸಮಾಜ’ ಸ್ಥಾಪನೆ. ೧೯೩೬---ಆಲೂರು ವೆಂಕಟರಾಯ‍ರಿಂದ ದಸರಾ ಹಬ್ಬವನ್ನು ನಾಡಹಬ್ಬವನ್ನಾಗಿ ಆಚರಿಸುವದರ ಪ್ರಾರಂಭ ೧೯೩೮---ಬೆಟಗೇರಿ ಕೃಷ್ಣಶರ್ಮರಿಂದ ‘ಜಯಂತಿ’ ಮಾಸಪತ್ರಿಕೆ ಹಾಗು ಗೆಳೆಯರ ಗುಂಪಿನಿಂದ ಜೀವನ ಮಾಸಪತ್ರಿಕೆಯ ಪ್ರಾರಂಭ; ಸುಭಾಷಚಂದ್ರ ಭೋಸ ಇವರ ಭೆಟ್ಟಿ ೧೯೩೯--- ಸುಭಾಷಚಂದ್ರ ಭೋಸ ಇವರ ಮರು ಭೆಟ್ಟಿ ೧೯೪೦---ವೀರ ಸಾವರಕರ ಇವರ ಭೆಟ್ಟಿ ೧೯೪೨---ಚಲೇಜಾವ್ ಚಳುವಳಿ ಪ್ರಾರಂಭ; ವಿಮಲಾ ಗುಳವಾಡಿ ಹಾಗು ಶಿನೋಳಕರ ಎನ್ನುವ ಬಾಲಕಿಯರಿಂದ ಜಿಲ್ಲಾಕಚೇರಿಯ ಮೇಲೆ ತ್ರಿವರ್ಣಧ್ವಜದ ಆರೋಹಣ! ೧೯೪೪---ಕರ್ನಾಟಕ ಶಿಕ್ಷಣ ಸಮಿತಿಯ ಕಲಾ ಕಾಲೇಜ ಪ್ರಾರಂಭ ೧೯೪೭---ಒಕ್ಕಲುತನದ ಕಾಲೇಜ ಪ್ರಾರಂಭ; ಜನತಾ ಶಿಕ್ಷಣ ಸಮಿತಿ ಪ್ರಾರಂಭ ೧೯೪೯---ಕರ್ನಾಟಕ ವಿಶ್ವವಿದ್ಯಾಲಯ ೧೯೭೪---ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಇವರು ಸಪ್ತಾಪುರದಲ್ಲಿ ಈಗಿರುವ ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದರು. ೧೯೮೬---ಕೃಷಿ ವಿಶ್ವವಿದ್ಯಾಲಯ, ಧಾರವಾಡ ರಾಜಕೀಯ ಧಾರವಾಡ ಜಿಲ್ಲೆಯಲ್ಲಿ ಒಟ್ಟು ೭ ವಿಧಾನಸಭಾ ಕ್ಷೇತ್ರಗಳಿವೆ. ಧಾರವಾಡ (ಇಂದಿನ ಶಾಸಕರು :ಅಮೃತ ದೇಸಾಯಿ ) ಹುಬ್ಬಳ್ಳಿ -ಧಾರವಾಡ ಪಶ್ಛಿಮ (ಇಂದಿನ ಶಾಸಕರು: ಅರವಿಂದ ಬೆಲ್ಲದ) ಹುಬ್ಬಳ್ಳಿ -ಧಾರವಾಡ ಮಧ್ಯ (ಇಂದಿನ ಶಾಸಕರು: ಜಗದೀಶ ಶೆಟ್ಟರ್) ಹುಬ್ಬಳ್ಳಿ -ಧಾರವಾಡ ಪೂರ್ವ (ಇಂದಿನ ಶಾಸಕರು:ಪ್ರಸಾದ ಅಬ್ಬಯ್ಯ ) ಕಲಘಟಗಿ (ಇಂದಿನ ಶಾಸಕರು: ಸಿ.ಎಂ. ನಿಂಬಣ್ಣವರ ) ಕುಂದಗೋಳ (ಇಂದಿನ ಶಾಸಕರು: ಕುಸುಮಾ ಶಿವಳ್ಳಿ ) ನವಲಗುಂದ (ಇಂದಿನ ಶಾಸಕರು: ಶಂಕರ ಪಾಟೀಲ ಮುನೇನಕೊಪ್ಪ)- ವಿಧಾನ ಪರಿಷತ್ತ ಸದಸ್ಯರು. ಬಸವರಾಜ ಹೊರಟ್ಟಿ ( ಶಿಕ್ಷಕರ ಕ್ಷೇತ್ರ ) ಶ್ರೀನಿವಾಸ ಮಾನೆ. (ಸ್ಥಳಿಯ ಸಂಸ್ಠೆ) ಪ್ರದೀಪ ಶೆಟ್ಟರ್ ಎಸ್.ವಿ. ಸಂಕನೂರ ಧಾರವಾಡ ಜಿಲ್ಲೆಯವರೆ ಆದ ಶ್ರೀ ಸೋಮಪ್ಪ ರಾಯಪ್ಪ ಬೊಮ್ಮಾಯಿಯವರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕೂಡ ಧಾರವಾಡ ಜಿಲ್ಲೆಯವರೇ. ಇವನ್ನೂ ನೋಡಿ ಹುಬ್ಬಳ್ಳಿ ಕರ್ನಾಟಕದ ಜಿಲ್ಲೆಗಳು ಕರ್ನಾಟಕ ಧಾರವಾಡ ಪೇಡ ಮಿರ್ಚಿ ಭಜಿ ಸಂಸ್ಕೃತ ಪಾಠಶಾಲೆ ಧಾರವಾಡ (ಲೋಕ ಸಭೆ ಚುನಾವಣಾ ಕ್ಷೇತ್ರ) ಮಂದಿರಗಳು ಭಗವಾನ್ ಸರಹುನಾಥ್ ಮಂದಿರ, ನುಗ್ಗಿಕೇರಿ (Lord Sarahunaath Temple) ಭಗವಾನ್ ಸರಹುನಾಥ್ ಮಂದಿರ, ಮದಿಹಾಳ (Lord Sarahunaath Temple) ಬಾಹ್ಯ ಸಂಪರ್ಕಗಳು ಧಾರವಾಡ್.ಕಾಂ ಭಾರತ ಕರ್ನಾಟಕದ ಜಿಲ್ಲೆಗಳು ಭೂಗೋಳ ಭಾರತದ ಪಟ್ಟಣಗಳು ಕರ್ನಾಟಕದ ಪ್ರಮುಖ ಸ್ಥಳಗಳು ಧಾರವಾಡ ಜಿಲ್ಲೆ
1031
https://kn.wikipedia.org/wiki/%E0%B2%9A%E0%B2%BE%E0%B2%AE%E0%B2%B0%E0%B2%BE%E0%B2%9C%E0%B2%A8%E0%B2%97%E0%B2%B0
ಚಾಮರಾಜನಗರ
ಚಾಮರಾಜನಗರ ದಕ್ಷಿಣ ಕರ್ನಾಟಕದಲ್ಲಿರುವ ಒಂದು ಜಿಲ್ಲೆ. ಮೊದಲಿಗೆ ಮೈಸೂರು ಜಿಲ್ಲೆಯ ಭಾಗವಾಗಿದ್ದ ಚಾಮರಾಜನಗರ ಈಗ ಒಂದು ಸ್ವತಂತ್ರ ಜಿಲ್ಲೆಯಾಗಿದೆ. ಈ ಜಿಲ್ಲೆಯ ಕೇಂದ್ರ ಅದೇ ಹೆಸರಿನ ಪಟ್ಟಣ. ಚಾಮರಾಜನಗರ ಜಿಲ್ಲೆಯ ಪ್ರಮುಖ ತಾಲೂಕುಗಳು ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲ. ಇತ್ತೀಚೆಗೆ ಹನೂರು ತಾಲೂಕು ರಚನೆಯಾಯಿತು. ಇತಿವೃತ್ತ ಚಾಮರಾಜನಗರ ಜಿಲ್ಲೆಯಲ್ಲಿ ಮಾತನಾಡಲ್ಪಡುವ ಪ್ರಮುಖ ಭಾಷೆ ಕನ್ನಡ. ಇಲ್ಲಿ ಮಾತನಾಡಲ್ಪಡುವ ಅಲ್ಪಸಂಖ್ಯಾತ ಭಾಷೆಗಳಲ್ಲಿ ಪ್ರಮುಖವಾದವು ಸೋಲಿಗನುಡಿ (ಮುಖ್ಯವಾಗಿ ಬಿಳಿಗಿರಿರಂಗನ ಬೆಟ್ಟದ ಪ್ರದೇಶದಲ್ಲಿ) ಚಾಮರಾಜನಗರ ಜಿಲ್ಲೆಯಲ್ಲಿ ಧಾರ್ಮಿಕ ಪ್ರಾಮುಖ್ಯತೆಯ ಸಾಕಷ್ಟು ಸ್ಥಳಗಳಿವೆ. ಇವುಗಳಲ್ಲಿ ಪ್ರಸಿದ್ಧವಾದದ್ದು ಮಲೆಮಹದೇಶ್ವರ ಬೆಟ್ಟ. ಇಲ್ಲಿ ನಡೆಯುವ ವಾರ್ಷಿಕ ಜಾತ್ರೆ ಸಾಕಷ್ಟು ಭಕ್ತರನ್ನು ಆಕರ್ಷಿಸುತ್ತದೆ. ಈ ಜಿಲ್ಲೆಯಲ್ಲಿ ನೈಸರ್ಗಿಕ ಸೌಂದರ್ಯದ ಉದಾಹರಣೆಗಳಲ್ಲಿ ಮುಖ್ಯವಾದವುಗಳೆಂದರೆ- ಬಿಳಿಗಿರಿರಂಗನ ಬೆಟ್ಟ , ಮಲೆಮಹದೇಶ್ವರ ಬೆಟ್ಟ ಮತ್ತು ಹಿಮವದ್ಗೋಪಾಲಸ್ವಾಮಿಬೆಟ್ಟ. ಶಿವನ ಸಮುದ್ರ ಬಂಡಿಪುರ ರಾಷ್ಟ್ರೀಯ ಉದ್ಯಾನವು ಜಿಲ್ಲೆಯ ದಕ್ಷಿಣಭಾಗದಲ್ಲಿದೆ. ಈ ಜಿಲ್ಲೆಯ ದಕ್ಷಿಣ ಭಾಗದಲ್ಲಿ ದಟ್ಟವಾದ ಅರಣ್ಯಗಳಿದ್ದು ಇಲ್ಲಿನ ಪ್ರಮುಖ ವನ್ಯಜೀವಿಗಳು ಆನೆ, ಹುಲಿ, ಕರಡಿ, ಜಿಂಕೆ, ಇತ್ಯಾದಿ. ಇಲ್ಲಿನ ಕಾಡುಗಳು, ಮುಖ್ಯವಾಗಿ ಮಲೆಮಹದೇಶ್ವರ ಬೆಟ್ಟ, ಕುಖ್ಯಾತವಾದ ಕಾಡುಗಳ್ಳ ವೀರಪ್ಪನ್ ನ ಅಡಗುದಾಣಗಳಾಗಿದ್ದವು. ಚಾಮರಾಜನಗರ ಜಿಲ್ಲೆಯ ಪರಿಚಯ ಕರ್ನಾಟಕದ ದಕ್ಷಿಣ ತುತ್ತತುದಿಯಲ್ಲಿರುವ ಚಾಮರಾಜನಗರ ಜಿಲ್ಲೆ ಭೂಪಟದಲ್ಲಿ ಬಾಹುಬಲಿಯ ಬಲಭಾಗದ ಪಾದುಕೆಯಂತೆ ಕಂಗೊಳಿಸುವುದನ್ನು ಕಾಣಬಹುದು. ದಕ್ಷಿಣ ಒಳನಾಡಿನ ಎಲೆ ಉದುರುವ, ಮಳೆಗಾಲದಲ್ಲಿ ಸದಾ ಹಸಿರಾಗಿರುವ ಅರಣ್ಯ ಸಾಲನ್ನು ಹೊಂದಿದೆ. ತಮಿಳುನಾಡು ಮತ್ತು ಕೇರಳಗಡಿಗುಂಟ ಹಂಚಿಕೊಂಡಿರುವ ಈ ಜಿಲ್ಲೆ ೧೧.೩೫ ಉತ್ತರ ಅಕ್ಷಾಂಶದಿಂದ ೧೨.೧೮ ಉತ್ತರ ಅಕ್ಷಾಂಶದವರೆವಿಗೂ, ೭೨.೨೪ ಪೂರ್ವ ರೇಖಾಂಶದಿಂದ ೭೭.೪೬ ಪೂರ್ವ ರೇಖಾಂಶದ ನಡುವೆ ೫೬೮೫ ಚ.ಕಿ.ಮೀ. ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ಪೂರ್ವ ಮತ್ತು ಪಶ್ಚಿಮ ಘಟ್ಟ ಸಂದಿಸುವ ನೀಲಗಿರಿ ಅರಣ್ಯ ವ್ಯಾಪ್ತಿಯಲ್ಲಿ ಬಿಳಿಗಿರಿರಂಗನ ಬೆಟ್ಟ ವನ್ಯಧಾಮ ಮತ್ತು ಬಂಡೀಪುರ ರಾಷ್ಟ್ರೀಯ ಹುಲಿ ಅಭಯಾರಣ್ಯ ೧೪೧೩ ಚ.ಕಿ.ಮೀ. ವಿಸ್ತೀರ್ಣದಲ್ಲಿ ಹಬ್ಬಿದೆ. ಜಿಲ್ಲೆಯ ಎತ್ತರದ ಕತ್ತರಿಬೆಟ್ಟ ೧೮೧೬ ಮೀ (ಇದು ಅತ್ತಿಖಾನೆ ಗ್ರಾಮದ ಹತ್ತಿರದಲ್ಲಿದೆ), ಬಿಳಿಗಿರಿರಂಗನ ಬೆಟ್ಟ ೧೧೫೧ ಎಂ, ಬೇಡಗುಳಿ ಎಸ್ಟೇಟು ೧೪೦೦ ಮೀ ಗಳಾಗಿದ್ದು ಆನೆ, ಹುಲಿ, ಚಿರತೆ, ಕಾಡುಕೋಣ, ಸೀಳುನಾಯಿ, ಜಿಂಕೆ, ಕರಡಿ, ಸಾರಂಗ, ಸಿಂಗಳೀಕ, ನವಿಲು, ಅಪರೂಪದ ಕೀಟ ಪ್ರಭೇದವನ್ನು ಒಳಗೊಂಡಿದೆ. ಕೀಟಭಕ್ಷಕ ಸಸ್ಯವರ್ಗ ಒಳಗೊಂಡಂತೆ ಶ್ರೀಗಂಧ, ಬೀಟೆ, ಹೊನ್ನೆ, ನೀಲಗಿರಿ ಮತ್ತು ಸಿಂಕೋನ ವೃಕ್ಷಗಳ ಜೀವ-ವೈವಿದ್ಯತಾ ಆವಾಸಗಳ ನಡುವೆ ಕಾಣಬರುತ್ತದೆ.ಕ್ರಿಸ್ತಪೂರ್ವದಿಂದಲೂ ಆದಿ ಮಾನವನ ನೆಲೆಯಾಗಿದ್ದ ಶಿಲಾ ಸಮಾಧಿಗಳನ್ನು ಬುಡಕಟ್ಟು ಜನಾಂಗ ಸೋಲಿಗರು ವಾಸಿಸುವುದನ್ನು ಬಿಳಿಗಿರಿರಂಗನ ಬೆಟ್ಟದ ಪೋಡುಗಳಲ್ಲಿ ಕಾಣಬಹುದಾಗಿದೆ. ಈ ಭಾಗದ ಜೀವನದಿಗಳಾದ ಸುವರ್ಣವತಿ ಚಿಕ್ಕಹೊಳೆ ಕಬಿನಿ, ಗುಂಡ್ಲು ನದಿಗಳು ಜಿಲ್ಲೆಯಲ್ಲಿ ಹರಿಯುವ ಕಾವೇರಿ ನದಿಯ ಉಪನದಿಗಳಾಗಿವೆ. ಇವುಗಳಿಗೆ ಅಲ್ಲಲ್ಲಿ ಅಣೆಕಟ್ಟೆ ನಿರ್ಮಿಸಲಾಗಿದೆ. ಜೀವನದಿ ಕಾವೇರಿ ೧೧೦ ಕಿ.ಮೀ. ದೂರವನ್ನು ಕ್ರಮಿಸಿ, ಗಗನಚುಕ್ಕಿ, ಭರಚುಕ್ಕಿ ಜಲಪಾತ ಸೃಷ್ಟಿಸಿ ೧೯೦೨ ರಲ್ಲಿ ಏಷ್ಯಾದ ಮೊದಲ ಜಲವಿದ್ಯುತ್ ತಯಾರಿಕೆ ನೆಲೆಯಾಗಿದ್ದು ಇದೇ ಜಿಲ್ಲೆಯಲ್ಲಿ. ಮುಂದೆ ಮಹದೇಶ್ವರ ಬೆಟ್ಟದಿಂದ ೫೦ ಕಿ.ಮೀ ಅಂತರದಲ್ಲಿರುವ ಹೊಗೆನಕಲ್ ಜಲಪಾತ ನೈಸರ್ಗಿಕ ಶಿಲೆಗಳನ್ನು ಸೃಷ್ಟಿಸಿದೆ. ರಾಜ್ಯ, ರಾಷ್ಟ್ರ, ವಿದೇಶಿಯರ ಆಕರ್ಷಣೀಯ ನೈಸರ್ಗಿಕ ಜಲಪಾತಗಳು ಇಲ್ಲಿನ ವೈಶಿಷ್ಟ್ಯ ಗಂಗರು, ಹೊಯ್ಸಳರು, ವಿಜಯನಗರ, ಮೈಸೂರರಸರ ಕಲಾವೈಭವವನ್ನು ಚಾಮರಾಜನಗರದ ಬಳಿ ಇರುವ ನರಸಮಂಗಲ, ಹರದನಹಳ್ಳಿ, ಶಿಲಾಶಾಸನ, ಗುಂಡ್ಲುಪೇಟೆ ತಾಲೂಕಿನಲ್ಲಿ ಕಂಡುಬರುವ ವರಹಾವಾಸುದೇವ ಮಂದಿರ, ಹುಲುಗನ ಮೊರಡಿ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಯಳಂದೂರಿನ ಬಳೇಮಂಟಪ, ಜಹಾಗಿರ್‌ದಾರ್ ಬಂಗಲೆ, ಕೊಳ್ಳೆಗಾಲದ ಬಳಿಯ ಮಧ್ಯರಂಗ ಇಲ್ಲಿನ ಐತಿಹಾಸಿಕ ಕುರುಹುಗಳಾಗಿವೆ. ಜನಸಂಖ್ಯೆ ಗಡಿಗಳಲ್ಲಿ ತಮಿಳು, ಮಲೆಯಾಳಂ ಮಾತನಾಡುವ ಜನರಿದ್ದು ಅತಿ ಹೆಚ್ಚು ಕನ್ನಡಿಗರಿದ್ದಾರೆ. ಹಿಂದೂ, ಮುಸ್ಲಿಂ,jaina, ಕ್ರಿಶ್ಚಿಯನ್ ಧರ್ಮಗಳ ಸಮನ್ವಯವನ್ನು ಕಾಣಬಹುದು. ಪ್ರಪಂಚದಲ್ಲಿಯೆ ವಿಶಿಷ್ಟವೆನಿಸಿದ ಕಪ್ಪುಶಿಲೆ ಅಥವ ಕರಿಕಲ್ಲು(ಗ್ರಾನೈಟ್) ಇಲ್ಲಿ ಕಂಡು ಬರುತ್ತದೆ. ಜತೆಗೆ ಸುಣ್ಣದ ಕಲ್ಲಿನ ನಿಕ್ಷೇಪವು ಹೇರಳವಾಗಿದೆ. ಶೇ ೪೮ ದಟ್ಟಾರಣ್ಯದಿಂದ ಸುತ್ತುವರಿದಿರುವ ಈ ಜಿಲ್ಲೆ ರಾಜ್ಯದಲ್ಲಿ ೨೫ನೇ ಸ್ಥಾನದಲ್ಲಿದೆ. ೨೦೦ ಯಿಂದ ೩೫೦ ಉಷ್ಣಾಂಶವನ್ನು ಹೊಂದಿದ್ದು ೭೦ ರಿಂದ ೧೦೦ ಸೆಂ.ಮೀ. ಮಳೆಯನ್ನು ಪಡೆಯುತ್ತದೆ. ಕೃಷಿಯ ಬಹುಭಾಗ ಮಳೆ ಆಶ್ರಯದ ಜತೆಗೆ ಕೊಳವೆ ಬಾವಿ, ತೆರೆದ ಬಾವಿ, ಕಬಿನಿ ನಾಲೆಗಳು ಕೃಷಿಕಾರ‍್ಯಗಳಿಗೆ ನೀರನ್ನು ಒದಗಿಸುತ್ತವೆ. ರೈತರು ಕಬ್ಬು, ಭತ್ತ, ರಾಗಿ, ಬಾಳೆ, ಕಡ್ಲೆಕಾಯಿ, ತೆಂಗು ಮತ್ತು ಅಡಿಕೆ ಬೆಳೆಗಳ ಜತೆಗೆ ಹಣ್ಣು, ತರಕಾರಿಗಳನ್ನು ಬೆಳೆಯುತ್ತಾರೆ. ೨೦೧೧ರ ಜನಗಣತಿಯ ಪ್ರಕಾರ ೧೦,೨೦,೭೯೧ ಜನಸಂಖ್ಯೆ ಹೊಂದಿದ್ದು ಪ್ರತಿ ಚ.ಕಿ.ಮೀ. ಪ್ರದೇಶದಲ್ಲಿ ೧೮೯ ಜನರು ವಾಸಿಸುತ್ತಿದ್ದಾರೆ. ೫೧.೨೬% ಸಾಕ್ಷರ ಪ್ರಮಾಣವಿದ್ದು ಲಿಂಗಾನುಪಾತ ೯೯೩ ಆಗಿದೆ. ೧೯೯೭ರಲ್ಲಿ ಜಿಲ್ಲಾ ಸ್ಥಾನ ಪಡೆದ ನಂತರ ೪ ತಾಲೂಕುಗಳನ್ನು ಹೊಂದಿದ್ದು ೧೫,೮೧೮ ತಲಾಧಾಯ ಇದೆ. ಮಲೆ ಮಹದೇಶ್ವರ, ರಾಚಪ್ಪಾಜಿ, ಸಿದ್ಧಪ್ಪಾಜಿ, ಮಂಟೇಸ್ವಾಮಿ ಮೊದಲಾದ ಪವಾಡ ಪುರುಷರ ಪಾದ ಸ್ಪರ್ಶದಿಂದ ಧಾರ್ಮಿಕವಾಗಿ ಮಹದೇಶ್ವರ ಬೆಟ್ಟ, ಚಿಕ್ಕಲೂರು, ಬಿಳಿಗಿರಿರಂಗ ಬೆಟ್ಟದ ಜಾತ್ರೆ, ಶಿಂಷಾದ ಬಳಿಯ ದರ್ಗಾಗಳು ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ವಿಭಿನ್ನ ಜನಪದ ಕಾವ್ಯಗಳಿಗೆ ಸ್ಫೂರ್ತಿಯಾಗಿವೆ. ಗೊರವರ ಕುಣಿತ, ಕಂಸಾಳೆ, ವೀರಗಾಸೆ, ಧಾರ್ಮಿಕ ಹಿನ್ನೆಲೆಯಲ್ಲಿ ರೂಪತಳೆದಿವೆ. ಮುರಾರ್ಜಿ, ವಸತಿ ಶಾಲೆಗಳ ಜತೆಗೆ ನವೋದಯ ಕೇಂದ್ರೀಯ ವಿದ್ಯಾಲಯದ ಮತ್ತು ವೃತ್ತಿ ಕಾಲೇಜುಗಳಾದ ಎಂಜಿನಿಯರ್, ಪಾಲಿಟೆಕ್ನಿಕ್, (ಡಿ.ಎಡ್) ಬಿ.ಎಡ್., ಪದವಿ., ಕಾಲೇಜುಗಳು ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿತವಾಗಿವೆ. ರಾಷ್ಟ್ರೀಯ ಹೆದ್ದಾರಿ ೨೦೯ ಮತ್ತು ೨೧೨ ಇಲ್ಲಿ ಹಾದು ಹೋಗಿರುವುದರ ಜತೆಗೆ ಬ್ರಾಡ್‌ಗೇಜ್ ರೈಲು ಮಾರ್ಗ ಕರ್ನಾಟಕದ ದಕ್ಷಿಣ ತುದಿಯ ಈ ಜಿಲ್ಲೆಯನ್ನು ಸಂಪರ್ಕಿಸುತ್ತದೆ. ಚಾಮರಾಜನಗರ ಉತ್ತರ ಭಾಗದಲ್ಲಿ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಿದ್ದು ದಕ್ಷಿಣದಲ್ಲಿ ತಮಿಳುನಾಡು ಮತ್ತು ಕೇರಳ ರಾಜ್ಯಗಳು ಜಿಲ್ಲೆಯ ಗಡಿಯನ್ನು ಹಂಚಿಕೊಂಡಿವೆ. ಪೂರ್ವ ಪಶ್ಚಿಮಭಾಗಗಳು ಬಹುತೇಕ ಅರಣ್ಯಗಳಿಂದ ಕೂಡಿವೆ. ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ಹಲವಾರು ಕವಿ, ಕಲಾವಿದರ ಜತೆಗೆ ನಟ ಡಾ||ರಾಜಕುಮಾರ ರಂತವರನ್ನು ನೀಡಿರುವ ಈ ಜಿಲ್ಲೆ, ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆಯಾಗಿದೆ ಹಾಗೂ ಉತ್ತಮ ಜನರನ್ನು ಕೊಡುಗೆ ನೀಡಿದೆ. ಜಿಲ್ಲೆಯ ಪ್ರವಾಸಿ ತಾಣಗಳು ಚಾಮರಾಜೇಶ್ವರ ದೇವಾಲಯ ಚಾಮರಾಜೇಶ್ವರ ದೇವಾಲಯ ಜಿಲ್ಲೆಯ ಪ್ರಮುಖ ದೇಗುಲಗಳಲ್ಲಿ ಒಂದಾಗಿದೆ. ನಗರದ ಹೃದಯ ಭಾಗದಲ್ಲಿರುವ ದೇವಾಲಯ ಸ್ಥಾಪನೆಯಾದದ್ದು, ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಒಂದು ಕಾಲದಲ್ಲಿ ಅರಿಕುಠಾರ ಎಂಬ ಗ್ರಾಮವಾಗಿದ್ದು, ಇದು ಚಾಮರಾಜ ಒಡೆಯರ್ ಜನಿಸಿದ್ದರಿಂದ ಚಾಮರಾಜನಗರ ಎಂಬ ಹೆಸರನ್ನು ಪಡೆಯಿತು. ದೇವಾಲಯದ ಮಹಾದ್ವಾರ ಪೂರ್ವ ದಿಕ್ಕಿಗಿದ್ದು ೫ ಅಂತಸ್ತಿನ ಗೋಪುರವಿದೆ. ತುದಿಯಲ್ಲಿ ೫ ಸುಂದರ ಚಿನ್ನದ ರಂಗಿನ ಕಲಶಗಳಿದ್ದು ಮುಂದೆ ಗರುಡಗಂಬವಿದೆ. ದೇವಾಲಯ ಪ್ರವೇಶ ಮಾಡಿದಾಗ ಈಶ್ವರನಿಗೆ ಮುಖ ಮಾಡಿರುವ ಬೃಹತ್ ನಂದಿ ಇದೆ. ದೇವಾಲಯದ ಪ್ರಕಾರದಲ್ಲಿ ೬೪ ಪುರಾತನ ಭಕ್ತರ ವಿಗ್ರಹಗಳಿವೆ. ಉತ್ತರದಲ್ಲಿ ಈಶ್ವರ ವಿಗ್ರಹ, ಈಶಾನ್ಯದಲ್ಲಿ ಯೋಗಶಾಲೆ, ಆಗ್ನೇಯದಲ್ಲಿ ಪಾಕ ಶಾಲೆಯೂ ಇದೆ. ಇಲ್ಲಿ ವಾಸ್ತುಶಿಲ್ಪವು ಹೊಯ್ಸಳರ ಕಲೆಯನ್ನು ನೆನಪಿಸುತ್ತವೆ. ಈ ದೇವಾಲಯದ ಒಳಭಾಗದಲ್ಲಿ ಕಂಡು ಬರುವ ಚಿತ್ರಗಳೆಂದರೆ ಗಿರಿಜಾ ಕಲ್ಯಾಣ, ಸಮುದ್ರಮಥನ ಮತ್ತು ಚಾಮುಂಡೇಶ್ವರಿ, ಇವು ೧೦೦ ವರ್ಷದ ಹಳೆಯವು. ಇಲ್ಲಿ ಪ್ರತಿವರ್ಷ ಆಷಾಢ ಮಾಸದಲ್ಲಿ ಆಷಾಡದ ಹುಣ್ಣಿಮೆಯ ದಿನ ರಥೋತ್ಸವ ನಡೆಯುತ್ತದೆ. ಈ ರಥೋತ್ಸವಕ್ಕೆ ನವದಂಪತಿಗಳು ಹಣ್ಣು ಜವನವನ್ನು ಎಸೆದು ಭಕ್ತಿ ಭಾವ ಮೆರೆಯುವರು. ಅರಿಕುಠಾರ:- ಈ ಸ್ಥಳಕ್ಕೆ ಹಿಂದೆ ಅರಿಕುಠಾರ ಅಥವಾ ಅರಿಕೂಠಾರ ಎಂಬ ಹೆಸರಿತ್ತು. ಒಡೆಯನೂರು ಎಂದು ಕರೆಯಲಾಗುತ್ತಿತ್ತು. ಹರಳುಕೋಟೆ:- ನಗರದಿಂದ ಪೂವ್ಕ್ಕೆ 5 ಕಿ.ಮೀ. ದೂರದಲ್ಲಿ ಹರಳುಕೋಟೆ, ಶ್ರೀ ಆಂಜನೇಯ ಸ್ವಾಮಿ ದೇವಾಲಯವಿದೆ. “ಹನುಮಚ್ಚಿಂತನ” ಎಂಬ ಗದ್ಯ ಕೃತಿಯೂ “ಶ್ರೀ ಹನುಮತ್ ಸುಪ್ರಭಾತ” ಎಂಬ ಪಠ್ಯಮಾಲಿಕೆಯೂ ಈ ಕ್ಷೇತ್ರದ ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವಗಳನ್ನು ಕುರಿತು ಬಣ್ಣಿಸಿರುವ ಕೃತಿಗಳು. ದೀನ ಬಂಧು ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪನವರ ಪುತ್ರರಾದ ಜಿ.ಎಸ್. ಜಯದೇವ್ ಇವರು ದೀನ-ದಲಿತರ ಉದ್ಧಾರಕ್ಕಾಗಿ ಹೆಸರೇ ಸೂಚಿಸುವಂತೆ ದೀನಬಂಧು ಸಂಸ್ಥೆಯನ್ನು ೧೯೯೨ರಲ್ಲಿ ಪ್ರಾರಂಭಿಸಿದರು. ಇದು ಜಿಲ್ಲಾ ಕೇಂದ್ರದಿಂದ ೩ ಕಿ.ಮೀ. ದೂರದಲ್ಲಿ ಹೌಸಿಂಗ್ ಬೋರ್ಡ್ ಕಾಲೋನಿಯ ಪಕ್ಕದ ಅರಣ್ಯ ಇಲಾಖೆಯ ನರ್ಸರಿ ಫಾರಂಗೆ ಹೊಂದಿಕೊಂಡಂತೆ ಇದೆ. ಸಂಸ್ಥಾಪಕರ ಮೆಚ್ಚುಗೆಗೆ ಪಾತ್ರರಾದ ಅನೇಕ ಸಂಘಸಂಸ್ಥೆಗಳು ಮತ್ತು ದಾನಿಗಳ ಉದಾರ ಕೊಡುಗೆಯಿಂದ ೧ ರಿಂದ ೧೦ನೇ ತರಗತಿಯವರೆಗೆ ಸ್ವಂತ ಕಟ್ಟಡದಲ್ಲಿ “ಸೃಜನಶೀಲ ಕಲಿಕೆ” ತತ್ವದ ಮಾದರಿಯಲ್ಲಿ ನಡೆಯುತ್ತದೆ. ಅನಾಥ ಮಕ್ಕಳ ವಸತಿ ಸಹಿತ ಶಾಲೆ, ಗಂಡು ಹೆಣ್ಣು ಮಕ್ಕಳಿಗೆ "ದೀನಬಂಧು ಮಕ್ಕಳ ಮನೆ" ಎಂಬ ಹೆಸರಿನ "ವಸತಿ ಸಹಿತ ಹೆಣ್ಣು ಮಕ್ಕಳ ಪುನರ್ವಸತಿ ಕೇಂದ್ರ" ಸುಸಜ್ಜಿತ ಕಟ್ಟಡದಲ್ಲಿ ನಡೆಯುತ್ತಿದೆ. ಇದು ಶಿಕ್ಷಕರ ಸಂಪನ್ಮೂಲ ಕೇಂದ್ರ ಹೊಂದಿದ್ದು ಶಿಕ್ಷಕರ ವೃತ್ತಿಪರ ಅಭಿವೃದ್ಧಿಗೆ ಅವಿರತ ಪ್ರಯತ್ನ ನಡೆಸುತ್ತಿದೆ. ಸುವರ್ಣಾವತಿ ಜಲಾಶಯ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ : ೧೮ ಕಿ.ಮೀ. ಚಾಮರಾಜನಗರ ತಾಲೂಕಿನ ಜೀವನಾಡಿ ಯಾದ ಸುವರ್ಣಾವತಿ ನದಿಯು ಆಗ್ನೇಯ ಭಾಗದ ಗಜ್ಜಲ ಹಟ್ಟಿ ಎಂಬಲ್ಲಿ ಹುಟ್ಟುತ್ತದೆ. ಈ ನದಿಗೆ ಚಾಮರಾಜನಗರ ಮತ್ತು ಕೊಯಮತ್ತೂರು ರಸ್ತೆಯ ಹೆದ್ದಾರಿಯಲ್ಲಿ ೧೯೭೭ರಲ್ಲಿ ಜಲಾಶಯವನ್ನು ನಿರ್ಮಿಸಲಾಗಿದೆ. ೨೬ ಮೀ. ಎತ್ತರ, ಉದ್ದ ೧೧೫೮ ಮೀ. ಇದ್ದು, ಈ ಜಲಾಶಯವು ಚಾಮರಾಜನಗರ, ಯಳಂದೂರು ಮತ್ತು ಕೊಳ್ಳೇಗಾಲ ತಾಲೂಕಿನ ಪ್ರದೇಶಗಳಿಗೆ ನೀರೊದಗಿಸುತ್ತದೆ. ಕಾವೇರಿ ಕಣಿವೆಗೆ ಸೇರಿದ ಈ ಜಲಾಶಯದ ನೀರಿನ ಸಾಮರ್ಥ್ಯ ೨೫೮,೭೮ ಕ್ಯೂಸೆಕ್ಸ್ ಇದೆ. ಇದರ ೨ ಕಿ.ಮೀ. ದೂರದಲ್ಲಿ ರಸ್ತೆಯ ಬಲಭಾಗದಲ್ಲಿ ಚಿಕ್ಕಹೊಳೆ ಅಣೆಕಟ್ಟು ಇದ್ದು ಇದು ಮಧ್ಯಮಗಾತ್ರದ ಅಣೆಕಟ್ಟು ಆಗಿದೆ. ಈ ಎರಡೂ ಜಲಾಶಯಗಳು ನಿಸರ್ಗದ ಮಡಿಲಲ್ಲಿದ್ದು, ನೀರಾವರಿ, ಮೀನುಗಾರಿಕೆ, ತೋಟಗಾರಿಕೆಗೆ ಪ್ರೋತ್ಸಾಹವಿದೆ. ಇದು ನೀರಾವರಿ ಇಲಾಖೆಗೆ ಸೇರಿದ್ದು ಪ್ರವಾಸಿಗರಿಗೆ ಉಳಿದುಕೊಳ್ಳಲು ವಸತಿ ಸೌಕರ್ಯವಿದೆ. ನರಸಮಂಗಲ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ : ೨೪ ಕಿ.ಮೀ. ಚಾಮರಾಜನಗರ ಜಿಲ್ಲಾ ಕೇಂದ್ರದಿಂದ ನೈರುತ್ಯದಲ್ಲಿರುವ ಗಂಗರ ಇತಿಹಾಸ ಬಿಂಬಿಸುವ ಗ್ರಾಮ ನರಸಮಂಗಲ, ಈ ಸ್ಥಳವು ಪ್ರಾಚೀನ ರಾಮಲಿಂಗೇಶ್ವರ ದೇವಾಲಯದಿಂದ ಪ್ರಸಿದ್ಧವಾಗಿದೆ. ಗಂಗರ ಕಾಲದಲ್ಲಿ ಅನೇಕ ಸುಂದರ ದೇವಾಲಯ ಮತ್ತು ಬಸದಿಗಳು ನಿರ್ಮಾಣಗೊಂಡವು ಅವುಗಳಲ್ಲಿ ಈ ದೇವಾಲಯವು ಒಂದು. ಇಲ್ಲಿನ ಶಿವಲಿಂಗವು ೬ ಅಡಿ ಎತ್ತರ ೧೨ ಅಡಿಗಳನ್ನು ಸುತ್ತಳತೆ ಹೊಂದಿದೆ. ಈ ದೇವಾಲಯವು ವಿಶಾಲವಾದ ಗರ್ಭಗೃಹ, ಕಿರಿದಾದ ಸುಖನಾಸಿ ಒಂಭತ್ತು ಅಂಕಣಗಳ ನವರಂಗಗಳಿವೆ. ಮೇಲೆ ವಿಮಾನ ಗೋಪುರವಿದೆ. ಇದು ತಮಿಳುನಾಡಿನ ಮಹಾಬಲಿಪುರಂ ಶಿಲ್ಪವನ್ನು ಹೋಲುವುದು. ಶಿಲ್ಪಗಳು ಬಹು ಸುಂದರ ಕಲಾ ಕೃತಿಗಳಾಗಿವೆ. ರಾಮಾಯಣ ಮಹಾಭಾರತ ಕಥೆಗೆ ಸಂಬಂಧಪಟ್ಟ ಹಲವಾರು ಸನ್ನಿವೇಷಗಳನ್ನು ಗೋಡೆಗಳ ಮೇಲೆ ಕೆತ್ತಲಾಗಿದೆ. ಈ ದೇವಾಲಯವನ್ನು ಭಾರತ ಸರ್ಕಾರವು ೧೯೫೮ರಲ್ಲಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲಾಗಿದೆ. ಮಲೆಯೂರಿನ ಕನಕಗಿರಿ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ : ೨೫ ಕಿ.ಮೀ. ಚಾಮರಾಜನಗರ ಪಶ್ಚಿಮದಲ್ಲಿರುವ ಮಲೆಯೂರಿನ ಕನಕಗಿರಿ ಜಗತ್ತಿನ ಸುಪ್ರಸಿದ್ಧ ಜೈನ ಕ್ಷೇತ್ರಗಳಲ್ಲಿ ಒಂದಾಗಿದೆ. ಮಲೆಯೂರಿನ ಪಶ್ಚಿಮಕ್ಕಿರುವ ಈ ಬೆಟ್ಟದ ಬಂಡೆಗಳ ಮೇಲೆ ಚರಣ ಪಾದುಕೆಗಳು, ಶಿಲಾಶಾಸನಗಳು, ಸಮಾಧಿ ಮಂಟಪ ಮತ್ತು ಗುಹೆಗಳಿವೆ. ೧೦ನೇ ಶತಮಾನಕ್ಕೆ ಸೇರಿದ ಕನಕಗಿರಿ ಮೇಲಿನ ಪಾರ್ಶ್ವನಾಥ ಬಸದಿ ಅತಿ ಪುರಾತನ ಹಾಗೂ ಸುಂದರ ಬಸದಿಯಾಗಿದೆ. ಈ ಸ್ಥಳದಲ್ಲಿ ನಾಗಾರ್ಜುನನಿಗೆ ಪದ್ಮಾವತಿ ಅಮ್ಮನವರು ಲೋಹ ವನ್ನು ಚಿನ್ನ ಮಾಡುವ ವಿದ್ಯೆಯನ್ನು ತಿಳಿಸಿದರು. ಈ ಕಾರಣದಿಂದ ಇದಕ್ಕೆ ಕನಕಗಿರಿ ಎಂಬ ಹೆಸರು ಬಂದಿದೆ. ಗಂಗರು ಮತ್ತು ಹೊಯ್ಸಳ ಕಾಲದ ಕಟ್ಟಡಗಳು, ಶಿಲಾಶಾಸನಗಳು ಇಲ್ಲಿ ಕಂಡು ಬರುತ್ತವೆ. ಇಲ್ಲಿನ ಶಿಲಾಶಾಸನಗಳ ಪ್ರಕಾರ ಅಜಿತಮುನಿ ಚಂದ್ರಸೇನಾಚಾರ್ಯ ಮುಂತಾದ ಹಲವರು ಸಲ್ಲೇಖನ ವ್ರತ ಕೈಗೊಂಡು ಸಮಾಧಿ ಪಡೆದರೆಂದು ತಿಳಿಯುತ್ತದೆ. 'ಕಲ್ಯಾಣಕಾರಕ ಚಿಕಿತ್ಸಾಶಾಸ್ತ್ರ' ಗ್ರಂಥ ಬರೆದ ಶ್ರೀ ಪೂಜ್ಯಪಾದರು ಈ ಊರಿನವರು. ದಿವ್ಯಲಿಂಗೇಶ್ವರ ದೇಗುಲ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ : ೫ ಕಿ.ಮೀ. ಚಾಮರಾಜನಗರ ಜಿಲ್ಲಾ ಕೇಂದ್ರದಿಂದ ಆಗ್ನೇಯದಿಕ್ಕಿಗಿರುವ ಹೋಬಳಿಕೇಂದ್ರ ಹರದನಹಳ್ಳಿ ಗ್ರಾಮದಲ್ಲಿ ಈ ದೇವಾಲಯವಿದೆ. ಹಿಂದೆ ಹೊಯ್ಸಳರು, ವಿಜಯನಗರ ಅರಸರು ಮತ್ತು ಮೈಸೂರು ಅರಸರು ಆಳುತ್ತಿದ್ದರು. ಈ ಊರಿನಲ್ಲಿ ಹಿಂದೆ ಕೋಟೆಯಿದ್ದು ಈಗ ಹಾಳಾಗಿದೆ. ಈ ಊರಿಗೆ ಕಳಸಪ್ರಾಯವಾಗಿರುವುದು ದಿವ್ಯ ಲಿಂಗೇಶ್ವರ ದೇವಾಲಯ. ಈ ದೇಗುಲವು ಗೋಪುರ ಮತ್ತು ಗರುಡಗಂಭವನ್ನು ಒಳಗೊಂಡಿದ್ದು ೨೦೦೧ನೇ ಇಸವಿಯ ಮಳೆಗಾಲದಲ್ಲಿ ರಾಜಗೋಪರವು ಶಿಥಿಲಗೊಂಡು ನೆಲಸಮವಾಗಿದೆ. *೧೩ನೇ ಶತಮಾನದಲ್ಲಿ ಹೊಯ್ಸಳ ವೀರಬಲ್ಲಾಳರ ಕಾಲದಲ್ಲಿ ನಿರ್ಮಾಣವಾಗಿತ್ತು. ದೇವಾಲಯದ ಗರ್ಭಗುಡಿಯಲ್ಲಿ ಶಿವಲಿಂಗವಿದ್ದು ಕಲಾತ್ಮಕವಾಗಿದೆ. ಇದರಿಂದ ೧೦೫ ಅಡಿ ದೂರದಲ್ಲಿ ನಂದೀಶ್ವರನ ವಿಗ್ರಹವಿದೆ. ಇದೊಂದು ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರವಾಗಿದ್ದು ಆಕರ್ಷಿಣಿಯ ಸ್ಥಳವಾಗಿದೆ. ಈ ಗ್ರಾಮವು ಮಹಿಮಾಪುರುಷರಾದ "ಎಡೆಯೂರು ಸಿದ್ಧಲಿಂಗೇಶ್ವರ"ರ ಜನ್ಮಸ್ಥಳವೂ ಹೌದು. ಬೂದಿ ಪಡಗ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ : ೩೦ ಕಿ.ಮೀ. ಸುವರ್ಣಾವತಿ ಜಲಾಶಯದ ಹಿನ್ನೀರಿನ ಕಾಡಂಚಿನಲ್ಲಿರುವ ಬೂದಿಪಡಗ ಪ್ರಸಿದ್ಧ ವನ್ಯಜೀವಿ ವಿಶ್ರಾಂತಿಧಾಮ, ಮೈಸೂರು ಮಹಾರಾಜರು – ಬ್ರಿಟಿಷರ ಅವಧಿಯಲ್ಲಿ ನಿರ್ಮಿಸಲಾದ ವಸತಿಗೃಹಗಳು ವಿಶಾಲಹುಲ್ಲು ಮೈದಾನ. ಅಮೂಲ್ಯ ವನ್ಯ ಜೀವಿಗಳು, ಬೂದಿಪಡಗದ ವಿಶೇಷಗಳು. ವನ್ಯಜೀವಿ ಛಾಯಾ ಗ್ರಾಹಕರಿಗೆ, ಪ್ರವಾಸಿಗರಿಗೆ ಸಂಶೋಧಕರಿಗೆ ಇದು ಅಚ್ಚುಮೆಚ್ಚಿನ ಪ್ರವಾಸಿ ಸ್ಥಳವಾಗಿದೆ. ಬೂದಿಪಡಗ ಬಿಳಿಗಿರಿರಂಗನ ಬೆಟ್ಟಗಳಲ್ಲಿ ವನ್ಯ ಜೀವಿಧಾಮದ ಭಾಗವಾಗಿದೆ. ಬೇಡಗುಳಿ ಮತ್ತು ಅತ್ತಿಖಾನೆ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ : ೫೦ ಮತ್ತು ೬೨ ಕಿ.ಮೀ ಚಾಮರಾಜನಗರದಿಂದ ತಮಿಳುನಾಡಿಗೆ ತೆರಳುವ ಮುಖ್ಯ ರಸ್ತೆಯ ನೀಲಗಿರಿ ಶ್ರೇಣಿಯ ಅಂಜಿನಲ್ಲಿರುವ ಬೇಡಗುಳಿ ಕರ್ನಾಟಕ – ತಮಿಳುನಾಡಿನ ಸೀಮಾರೇಖೆ. ನಿತ್ಯಹರಿದ್ವರ್ಣದ ವನ್ಯಜೀವಿಧಾಮ. ಬೇಡಗುಳಿ ಮತ್ತು ಅತ್ತಿಖಾನೆ ಪ್ರದೇಶದಲ್ಲಿ ವಾಸಿಸುವ ಗಿರಿಜನರು ಮತ್ತು ಯುರೋಪಿಯನ್ನರ ಕಾಲದ ಕಾಫಿ ತೋಟಗಳು ವಿಶೇಷಗಳು. ಬೇಡಗುಳಿ ಮತ್ತು ಅತ್ತಿಖಾನೆ ಗಿರಿಜನರ ಹಾಡಿಗಳು ಅವರ ಹಾಡುಪಾಡು. ಅವರ ಜೀವನ ಶೈಲಿ ಮತ್ತು ಸಂಸ್ಕೃತಿ ಸಂಪ್ರದಾಯಗಳು ಅಧ್ಯಯನ ಯೋಗ್ಯವಾಗಿದೆ. ಸುಂದರ ಗಿರಿಶ್ರೇಣಿಗಳು ಅದ್ಭುತ ಕಣಿವೆಗಳು ಮನೋಹರ ಜಲಪಾತಗಳು ಆಕರ್ಷಕ. ವನ್ಯಜೀವಿಗಳು ಬೇಡಗುಳಿ ಮತ್ತು ಅತ್ತಿಖಾನೆ ಅರಣ್ಯ ಪ್ರದೇಶದ ವಿಶೇಷ ಅರಣ್ಯ ಇಲಾಖೆಯ ನಿರ್ವಹಣೆಯಲ್ಲಿರುವ ಬೇಡಗುಳಿ ಅತಿಥಿಗೃಹ ನೂರು ವರುಷಗಳಷ್ಟು ಪುರಾತನವಾಗಿದೆ. ವನ್ಯಜೀವಿ ಪ್ರದೇಶವಾಗಿರುವುದರಿಂದ ಪ್ರವೇಶಿಸಲು ಅರಣ್ಯ ಇಲಾಖೆ ಅನುಮತಿ ಅಗತ್ಯ. ಎಲೆಮರೆಯ ಕಾಯಿಯಂತಿರುವ ಅತ್ತಿಖಾನೆಯ ಕತ್ತರಿ ಬೆಟ್ಟವು (ಸಮುದ್ರ ಮಟ್ಟದಿಂದ ೧೮೧೬ ಮೀ) ಈ ಜಿಲ್ಲೆಯಲ್ಲೆ ಅತಿ ಎತ್ತರವಾದ ಬೆಟ್ಟವಾಗಿದ್ದು, ಇದರ ತಪ್ಪಲಿನಲ್ಲಿ ಹುಟ್ಟುವ ಝರಿಗಳೆ ತೊರೆಯಾಗಿ ಹರಿದು ಚಾಮರಾಜನಗರ ಜಿಲ್ಲೆಯ ಜೀವನಾಡಿಯಾದ ಸುವರ್ಣಾವತಿ ನದಿಯಾಗಿ ಹರಿದು ಸುವರ್ಣಾವತಿ ಜಲಾಶಯದ ಒಡಲಸೇರಿ ಜಿಲ್ಲೆಯ ಆಧಾರವಾಗಿದೆ. ಅತ್ತಿಖಾನೆ ಗ್ರಾಮವು ಕೊಳ್ಳೇಗಾಲ ತಾಲ್ಲೂಕಿಗೆ ಸೇರಿದ್ದು ಸುಂದರ ಅತಿಸುಂದರ ಗಿರಿಕಣಿವೆಗಳ ಆಗರವೇ ಆಗಿದೆ. ಜೋಡಿಗೆರೆ ಜೋಡಿಗೆರೆ ಸೌಂದರ್ಯವನ್ನು ಒಂದೆರಡು ಮಾತಿನಲ್ಲಿ ವರ್ಣಿಸಲಾಗದು. ಇದೊಂದು ಪ್ರಕೃತಿಯ ಅಪ್ರತಿಮ ಕೊಡುಗೆ ನಿಂತು ನೋಡಿದರೆ ನೋಡಿದಷ್ಟು ಆನಂದ. ವಿಶಾಲ ಹುಲ್ಲು ಗಾವಲು. ಶೋಲಾ ಅರಣ್ಯ ಪ್ರದೇಶ. ಮನಬಿಚ್ಚಿ ಓಡಾಡುವ ವನ್ಯಜೀವಿಗಳು ಸುಯ್‌ಗುಡುವ ತಂಗಾಳಿ. ಇವೆಲ್ಲವೂ ಒಂದು ಮಾಯಾಲೋಕವನ್ನು ಸೃಷ್ಟಿಸುತ್ತವೆ. ಜಗತ್ತಿನ ಅಪರೂಪದ ಪ್ರದೇಶವೆಂಬಂತೆ ವನ್ಯಜೀವಿಗಳು ಹುಲ್ಲುಗಾವಲಿನಲ್ಲಿ ಗುಂಪುಗುಂಪಾಗಿ ನಲಿದಾಡುವುದನ್ನು ನೋಡಿದರೆ ಇದೊಂದು ಮಿನಿ ಜುರಾಸಿಕ್ ಪಾರ್ಕ್‌ನಂತೆ ಕಾಣುತ್ತದೆ. ಸಮುದ್ರ ಮಟ್ಟದಿಂದ ಸುಮಾರು ೧೬೦೦ ಮೀಟರ್‌ಗಳಷ್ಟು ಎತ್ತರದಲ್ಲಿರುವ ಜೋಡಿಗೆರೆ ಬಿಳಿಗಿರಿ ರಂಗನಬೆಟ್ಟ ವನ್ಯಜೀವಿಧಾಮದ ಒಂದು ಭಾಗವಾಗಿದ್ದು ಇಲ್ಲಿಗೆ ಪ್ರವೇಶಿಸಲು ಅರಣ್ಯ ಇಲಾಖೆಯ ಅನುಮತಿ ಅಗತ್ಯ. ಕೆ. ಗುಡಿ (ಕ್ಯಾತೇದೇವರ ಗುಡಿ) ಚಾಮರಾಜನಗರದ ಪೂರ್ವಕ್ಕಿರುವ ಪ್ರಕೃತಿ ಧಾಮ. ಸಮುದ್ರ ಮಟ್ಟದಿಂದ ೧೪೫೦ ಮೀಟರ್‌ಗಳಷ್ಟು ಎತ್ತರದಲ್ಲಿದೆ. ಇಲ್ಲಿ ಕರ್ನಾಟಕ ಜಂಗಲ್ ಲಾಡ್ಜ್ ನ ವನ್ಯಜೀವಿ ಪ್ರವಾಸೋದ್ಯಮ ಕೆಲಸ ಮಾಡುತ್ತಿದೆ. ಜೊತೆಗೆ ಅರಣ್ಯ ಇಲಾಖೆಯ ಅತಿಥಿಗೃಹವಿದೆ. ಅರಣ್ಯ ಇಲಾಖೆಯ ಆನೆ ಸಫಾರಿ ಮತ್ತು ವನ್ಯಜೀವಿ ಸಫಾರಿ ಬಹಳ ಪ್ರಸಿದ್ಧ. ಕೆ. ಗುಡಿಗೆ ದೇಶ-ವಿದೇಶಗಳು ಪ್ರವಾಸಿಗರ ಆಗಮನವಿದೆ. ಪ್ರಾಣಿ ಪಕ್ಷಿ, ಪ್ರಕೃತಿ ಸಂಶೋಧಕರಿಗೆ ಮತ್ತು ಪ್ರವಾಸಿಗರಿಗೆ ಕೆ. ಗುಡಿ ರಮ್ಯತಾಣವಾಗಿದ್ದು ಇಲ್ಲಿ ಆನೆ, ಹುಲಿ, ಚಿರತೆ, ಕಾಡೆಮ್ಮೆ, ಕರಡಿ, ಜಿಂಕೆ, ಕಡವೆ ಈ ಅರಣ್ಯದ ಪ್ರಮುಖ ವನ್ಯಜೀವಿಗಳು. ಬೆಲ್ಲತ್ತ ಪಕ್ಷಿರಾಶಿ ಚಾಮರಾಜನಗರ ತಾಲ್ಲೋಕಿ ನಲ್ಲಿರುವ ಬೆಲ್ಲತ್ತ ಜಲಾಶಯ ಬಿಳಿಗಿರಿರಂಗನ ಬೆಟ್ಟದ ಕಾಡಂಚಿನಲ್ಲಿದೆ. ಕಾಡಂಚಿಗೆ ತಾಗಿಕೊಂಡಿರುವ ಹಿನ್ನೀರಿ ನಿಂದಾಗಿ ಪ್ರಾಣಿಗಳು ಪಕ್ಷಿಗಳಿಗೆ ಸಮೃದ್ಧ ಪ್ರದೇಶವಾಗಿದೆ. ಈ ಜಲಾಶಯದ ಸುತ್ತ ದೇಶ ವಿದೇಶಗಳ ವೈವಿಧ್ಯಮಯ ಪಕ್ಷಿಗಳ ಸಮ್ಮಿಲನವಾಗುತ್ತದೆ. ನಿಸರ್ಗ ಪ್ರಿಯರಿಗೆ ಪಕ್ಷಿ ಛಾಯಗ್ರಾಹಕರಿಗೆ ಮತ್ತು ಸಂಶೋಧಕರಿಗೆ ಇದೊಂದು ಉತ್ತಮ ತಾಣವಾಗಿದೆ. ಯಳಂದೂರು ಬಹಳ ಹಿಂದೆ ಯಳಂದೂರು ಪದಿನಾಡಿನ ರಾಜವಂಶಸ್ಥರ ಮುಖ್ಯ ಪಟ್ಟಣ ಅಥವಾ ರಾಜಧಾನಿಯಾಗಿತ್ತು. ಈ ವಿಷಯ ಹದಿನಾಡಿನ ಉಲ್ಲೇಖ ಕ್ರಿ.ಶ. ೧೦೧೮ರ ಚೋಳ ದೊರೆ ಒಂದನೇ ರಾಜೇಂದ್ರನ ಕಾಲದ ಶಾಸನದಲ್ಲಿ ಕಂಡು ಬಂದಿದೆ. ಜೈನಧರ್ಮದ ಪ್ರಮುಖ ಮುನಿಗಳಾದ ಶ್ರೀ ಬಾಲಚಂದ್ರ ಮುನಿಗಳ ಹೆಸರು ಈ ಊರಿಗೆ ಇತ್ತು. ನಂತರ ಬಾಲೇಂದುಪುರ ಎಂದಾಯಿತು. ನಂತರ ಎಳವಂದೂರಾಯಿತು. ಮುಂದೆ ಯಳಂದೂರಾಯಿತು. ಇಲ್ಲಿ ಜೈನ ಧರ್ಮದ ಮತ್ತು ವೀರಶೈವ ಧರ್ಮದ ಅನೇಕ ಹೆಸರಾಂತ ಮಹಾಕವಿಗಳು ಇಲ್ಲಿ ಇದ್ದರು. ಇವರು ರಚಿಸಿರುವ ಲೀಲಾವತಿ ಪ್ರಬಂಧ ರಾಜಶೇಖರ ವಿಲಾಸ ಹಾಗೂ ಸಂಚಿ ಹೊನ್ನಮ್ಮ ರಚಿಸಿದ ಹದಿಬದಿಯ ಧರ್ಮ ಶ್ರೇಷ್ಠ ಕೃತಿಗಳಾಗಿವೆ. ಇಂತಹ ಪುಣ್ಯ ಭೂಮಿಯಲ್ಲಿ (ಸುವರ್ಣಾವತಿ) ಹೊನ್ನು ಹೊಳೆ ಹರಿಯುತ್ತದೆ. ಇದಕ್ಕೆ ಇರುವ ದಂತ ಕಥೆಯ ಉಲ್ಲೇಖವು ಶಾಸನವೊಂದರಲ್ಲಿ ದೊರೆಯುತ್ತದೆ. ಯಳಂದೂರು ಸಂಪದ್ಭರಿತವಾದ ಹಾಗೂ ಜನಾಕರ್ಷಕವಾದ ಸ್ಥಳವಾಗಿದ್ದು ನಿರ್ದಿಷ್ಟ ರಾಜಮನೆತನಗಳು ಇದ್ದವು ಎಂಬುದು ತಿಳಿದು ಬಂದಿದೆ. ಬಳೇ ಮಂಟಪ ಯಳಂದೂರಿನ ಗೌರೀಶ್ವರ ದೇವಾಲಯದ ಮುಖ ಮಂಟಪವನ್ನು ಕ್ರಿ.ಶ. ೧೬೫೪ರಲ್ಲಿ ಮುದ್ದುರಾಜನು ಬಹಳ ರಮ್ಯವಾಗಿ ಕಟ್ಟಿಸಿದ್ದಾನೆ. ಇದು ಬಹಳ ಸುಂದರವಾದ ಅತ್ಯಂತ ಪ್ರಾಚೀನ ಹಾಗೂ ಕಲಾಪೂರ್ಣ ಕಗ್ಗಲ್ಲಿನ ಮಂಟಪವಾಗಿದೆ. ಈ ಮಂಟಪ ಹಂಪೆಯ ೨೭ ಕಲ್ಲಿನ ರಥವನ್ನು ಹೋಲುತ್ತದೆ. ಈ ಮಂಟಪವು ಬೇಲೂರು ಮತ್ತು ಹಳೇ ಬೀಡಿನ ದೇವಾಲಯದ ಶಿಲ್ಪಕಲೆಯಂತೆ ಇದೆ. ಈ ಮಂಟಪವೂ ಚತುರ್ಮುಖಗಳನ್ನು ಹೊಂದಿದ್ದು ಸುಂದರವಾದ ಕಲ್ಲಿನ ಬಳೆಗಳಿಂದ ಕೂಡಿದ ಮಂಟಪವಾಗಿದೆ. ಶಿಲೆಯ ಗೋಡೆಯಲ್ಲಿ ಶೈವ ಪುರಾಣದ, ರಾಮಾಯಣದ ಹಾಗೂ ಮಹಾಭಾರತದ ಕೆಲವು ಘಟನೆಗಳನ್ನು ಅತ್ಯಂತ ಮನೋಹರವಾಗಿ ಸುಂದರವಾಗಿ ಕೆತ್ತಿರುವುದನ್ನು ನೋಡಬಹುದು. ಈ ಮಂಟಪದ ಮಧ್ಯಭಾಗದಲ್ಲಿ ಒಂದೇ ಕಲ್ಲಿನಿಂದ ಕಮಲದ ಮೊಗ್ಗನ್ನು ಬಿಡಿಸಿ ಮೇಲ್ಭಾಗದಲ್ಲಿ ಜೋಡಿಸಿರುವುದು ಮನೋಹರವಾಗಿದೆ. ಈ ಮಂಟಪದ ಮೂಲೆಗಳಲ್ಲಿ ಬಳೆಗಳನ್ನು ಒಂದರೊಳಗೊಂದು ಜೋಡಿಸಿದಂತೆ ಒಂದೇ ಕಲ್ಲಿನಿಂದ ಮಾಡಿರುವುದು ಅದ್ಭುತವಾಗಿದೆ. ಈ ಬಳೆಗಳು ಇರುವುದರಿಂದಲೇ ರೂಢಿಯಿಂದ ಈ ಮಂಟಪವನ್ನು ಬಳೆ ಮಂಟಪ ಎಂದು ಕರೆಯುತ್ತಾರೆ. ಗೌರೀಶ್ವರ ದೇವಾಲಯ ಯಳಂದೂರಿನಲ್ಲಿರುವ ಗೌರೀಶ್ವರ ದೇವಾಲಯದ ವೈಶಿಷ್ಟತೆಯನ್ನು ತಿಳಿಯಲು ಇಲ್ಲಿರುವ ಶಿಲಾಶಾಸನ ಒಂದೇ ಆಧಾರ ಯಳಂದೂರಿನಲ್ಲಿ ಆಳಿದ ರಾಜ ಮನೆತನಗಳಲ್ಲಿ ಪದಿನಾಡ ಅರಸರೇ ಪ್ರಮುಖರು. ಈ ಮನೆತನದ ಮೊದಲನೆರಾಜ ಸಿಂಗದೇವಭೂಪನು ಗೌರೀಶ್ವರ ದೇವಾಲಯವನ್ನು ಮುದ್ದುರಾಜನು ಕ್ರಿ.ಶ. ೧೬೫೪ರಲ್ಲಿ ದೇವಾಲಯದ ಮುಖ ಮಂಟಪ ಪಂಚಲಿಂಗಗಳನ್ನೊಳಗೊಂಡ ಗುಡಿಗಳನ್ನು ಕಟ್ಟಿಸಿದ್ದಾನೆ. ಈ ಗೌರೀಶ್ವರನು ಹಿಂದೆ ಕೃತಾಯುಗದಲ್ಲಿ ಜಮದಗ್ನಿ ಮಹಾರ್ಷಿಯಿಂದ “ತ್ರಿಪುರಾಂತಕ”ನೆಂದೂ ತ್ರೇತಾಯುಗದಲ್ಲಿ ಶ್ರೀರಾಮಚಂದ್ರನಿಂದ “ನೀಲಕಂಠ” ನೆಂದೂ, ದ್ವಾಪರಾಯುಗದಲ್ಲಿ ಪಾಂಡವರಿಂದ ಲೋಕೇಶ್ವರನೆಂದೂ ಕಲಿಯುಗದಲ್ಲಿ ಪದಿನಾಡಿನ ರಾಜ ವಂಶಸ್ಥರು ಗೌರೀಶ್ವರನೆಂದೂ ಪೂಜಿಸುತ್ತಿದ್ದರು. ಈ ದೇವಾಲಯದ ಆವರಣದಲ್ಲಿರುವ ಎರಡು ಪಗಡೆ ಮರಗಳು ದೇವಾಲಯದ ಆವರಣವನ್ನು ಬೇಸಿಗೆಯಲ್ಲೂ ತಂಪಾಗಿಸುತ್ತಿದೆ. ಬಿಳಿಗಿರಿರಂಗನಬೆಟ್ಟ ಪೂರ್ವ ಘಟ್ಟದಲ್ಲಿ ಮಲೈ ಮಹಾದೇಶ್ವರ ಬೆಟ್ಟ ಶ್ರೇಣಿ ಹಾಗೂ ದಿಂಬಮ್ ಬೆಟ್ಟ ಶ್ರೇಣಿಗಳ ನಡುವೆ ೩೦ ಮೈಲಿ ದೂರ ಫಲವತ್ತಾದ ಮಣ್ಣು ಮತ್ತು ದಟ್ಟ ಅರಣ್ಯದಿಂದ ಕೂಡಿರುವ ಬೆಟ್ಟವೇ ಬಿಳಿಗಿರಿರಂಗನ ಬೆಟ್ಟ. ಯಳಂದೂರು ತಾಲ್ಲೂಕಿನಿಂದ ೨೪ ಕಿ.ಮೀ. ದೂರದಲ್ಲಿರುವ ಈ ಬೆಟ್ಟವು ಬಿಳಿಕಲ್ಲು ಬೆಟ್ಟ. ಶ್ವೇತಾದ್ರಿಬೆಟ್ಟ. ಬಿಳಿಗಿರಿರಂಗಸ್ವಾಮಿ ಬೆಟ್ಟ ಎಂದು ಹಲವಾರು ಹೆಸರುಗಳಿಂದ ಪ್ರಸಿದ್ಧವಾಗಿದೆ. ಈ ಬೆಟ್ಟವು ಸಮುದ್ರಮಟ್ಟದಿಂದ ೪೪೭೦ ಅಡಿಗಳ ಎತ್ತರದಲ್ಲಿದ್ದು, ಔಷಧಿ ಸಸ್ಯಗಳಿಂದಲೂ, ತೇಗ, ಬೀಟೆ, ಹೊನ್ನೇ, ಮತ್ತಿ, ಬಿದುರು, ಮುಂತಾದ ಬೆಲೆ ಬಾಳುವ ಮರಗಳಿಂದ ಕೂಡಿದ ದಟ್ಟ ಅರಣ್ಯ ಪ್ರದೇಶವಾಗಿದೆ. ಇಲ್ಲಿ ಹುಲಿ, ಚಿರತೆ, ಜಿಂಕೆ, ಆನೆ, ಕಾಡೆಮ್ಮೆ, ಕರಡಿ, ಮುಂತಾದ ಕಾಡು ಮೃಗಗಳು ಇವೆ. ಈ ಕಾನನ ಪ್ರದೇಶವನ್ನು ಪಾಂಡವರ ಕಾಲದಲ್ಲಿ ಚಂಪಕಾರಣ್ಯ ಎಂದು, ಗಂಗರ ಕಾಲದಲ್ಲಿ ಗಜಾರಾಣ್ಯ ಎಂದು ಕರೆಯುತ್ತಿದ್ದರು. ಶಿಲಾಯುಗದ ಮಾನವರು ಬಳಸುತ್ತಿದ್ದ ಆಯುಧಗಳು, ಮಡಿಕೆಗಳು, ಮತ್ತು ಅವರ ಸಮಾಧಿಗಳು, ಕಂಡು ಬಂದಿದೆ. ಬಿಳಿಗಿರಿರಂಗಸ್ವಾಮಿ ಬೆಟ್ಟದಲ್ಲಿರುವ ಶ್ರೀ ರಂಗಸ್ವಾಮಿ ದೇವಾಲಯವು ವಿಜಯನಗರ ಅರಸರ ಕಾಲದಲ್ಲಿ ನಿರ್ಮಾಣವಾಗಿದೆ. ಏಪ್ರಿಲ್ ಮೇ ತಿಂಗಳಲ್ಲಿ ನಡೆಯುವ ದೊಡ್ಡ ಜಾತ್ರೆಯು ಬಹಳ ಪ್ರಸಿದ್ಧಿಯನ್ನು ಪಡೆದಿದೆ. ದೊಡ್ಡ ಸಂಪಿಗೆ ಇದು ಬಿಳಿಗಿರರಂಗನ ಬೆಟ್ಟದ ಕಾಡಿಗೆ ಸೇರಿದ ಪ್ರದೇಶದಲ್ಲಿದ್ದು ಈ ಸ್ಥಳದಲ್ಲಿ ಭಾರ್ಗವೀ ನದಿ ನಯನ ಮನೋಹರವಾದ ಕಣಿವೆಯಲ್ಲಿ ಹರಿಯುತ್ತಿದೆ. ಪರಶುರಾಮನು ಮಾತೃ ಹತ್ಯಾ ದೋಷ ಪರಿಹಾರಕ್ಕಾಗಿ ಈ ಪರ್ವತದ ಮೇಲೆ ತಪಸ್ಸಾಚರಿಸಿದರೆಂದು ಪ್ರತೀತಿ. ಈ ಸ್ಥಳದಲ್ಲಿ ದೊಡ್ಡ ಸಂಪಿಗೆ ವೃಕ್ಷವಿದೆ. ಈ ಮಹಾವೃಕ್ಷದಲ್ಲಿ ೩ ಕೊಂಬೆಗಳಿದ್ದು ಇವು ಬ್ರಹ್ಮ-ವಿಷ್ಣು ಮತ್ತು ಮಹೇಶ್ವರರ ಸಂಕೇತ ಎಂದು ತಿಳಿಯಲಾಗಿದೆ. ಈ ಮಹಾವೃಕ್ಷವನ್ನು ‘ಸೋಲಿಗರು’ ತಮ್ಮ ಆರಾಧ್ಯ ದೈವವಾಗಿ ಭಯ ಭಕ್ತಿಯಿಂದ ಪೂಜಿಸುತ್ತಾರೆ. ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರ (ವಿ.ಜಿ.ಕೆ.ಕೆ.) ತಲೆತಲಾಂತರದಿಂದ ಗುಡ್ಡಗಾಡುಗಳಲ್ಲಿ ಸಂಚರಿಸುತ್ತಾ ನಾಡಿನ ಸಂಪರ್ಕವನ್ನು ಕಳೆದುಕೊಂಡಿದ್ದ ಸೋಲಿಗ ಬುಡಕಟ್ಟು ಜನರಲ್ಲಿ ಆತ್ಮ ವಿಶ್ವಾಸ ತುಂಬಿ ವಂಶ ಪರಂಪರೆಯಾಗಿ ಅವರಲ್ಲಿ ಮನೆ ಮಾಡಿದ್ದ ಅನಿಮಿಯ ರೋಗದಿಂದ ಅವರನ್ನು ಪಾರು ಮಾಡಿ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವ ದೆಸೆಯಲ್ಲಿ ೧೯೮೧ರಲ್ಲಿ ಅಸ್ತಿತ್ವಕ್ಕೆ ಬಂದ ಕೇಂದ್ರವೇ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರ. ಸೋಲಿಗರ ಪ್ರಗತಿಯನ್ನು ಕೇಂದ್ರವಾಗಿರಿಸಿಕೊಂಡಿರುವ ಈ ಕೇಂದ್ರ ಅವರಿಗೆ ಸೀಮಿತವಾಗಿರದೆ, ಜೇನು ಕುರುಬ, ಕಾಡು ಕುರುಬ, ಬೆಟ್ಟ ಕುರುಬ, ಪಣಿಯ, ಹಕ್ಕಿಪಿಕ್ಕಿ, ಯರವ, ಲಂಬಾಣಿ,ಕೊರಮ ಇತ್ಯಾದಿ ಬುಡಕಟ್ಟಿನ ಜನರ ಪ್ರಗತಿಗೆ ಶ್ರಮಿಸುತ್ತಿದೆ. ಆರಂಭದಲ್ಲಿ ಏಳು ಮಕ್ಕಳ ಪ್ರವೇಶದೊಂದಿಗೆ ಆರಂಭವಾದ ಪ್ರಾಥಮಿಕ ಶಾಲೆ, ಇಂದು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು, ಮತ್ತು ವೃತ್ತಿಪರ ಕಾಲೇಜನ್ನು ಹೊಂದಿರುವುದರ ಜೊತೆಗೆ ಸಾಮಾಜಿಕವಾಗಿಯೂ ಬೆಳೆದು ಹೆಮ್ಮರವಾಗಿದೆ. ಬುಡಕಟ್ಟು ಜನರ ಅರಿವಿನ ಆಶ್ರಯಧಾಮವಾಗಿದೆ.ಸೋಲಿಗರ ಬದುಕನ್ನು ಹಸನು ಮಾಡಲು ಜೀವನ ತ್ಯಾಗ ಮಾಡಿದ ಡಾ. ಎಚ್. ಸುದರ್ಶನ್ ರವರಿಗೆ ಮಹತ್ಕಾರ‍್ಯವನ್ನು ಪ್ರಶಂಸಿಸಿ ೯ ಡಿಸೆಂಬರ್ ೧೯೯೪ರಂದು ಅಂತರರಾಷ್ಟ್ರೀಯ ಸಂಸ್ಥೆಯೊಂದು ‘ರೈಟ್ ಲೈವಿಲಿಹುಡ್ ಅವಾರ್ಡ್’ನೀಡಿ ಗೌರವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಲಯದ ಪ್ರವಾಸಿ ತಾಣಗಳು ಮರಡಿಗುಡ್ಡ, ಚಿಲಕವಾಡಿ, ಕುಂತೂರು, ಕುರುಬನ ಕಟ್ಟೆ, ಕನಕಗಿರಿ ಕ್ಷೇತ್ರ, ಚಿಕ್ಕಲ್ಲೂರು, ಉಗನಿಯ, ಶಿವನ ಸಮುದ್ರ, ವೆಸ್ಲಿ ಸೇತುವೆ, ಬೂದಬಾಳು ಕ್ಷೇತ್ರ, ಭರಚುಕ್ಕಿ, ಯಡಕುರಿ ಕೊಳ್ಳೇಗಾಲ ಕೊಳ್ಳೇಗಾಲ ತಾಲ್ಲೂಕು ಕೇಂದ್ರದಿಂದ = ೦ ಕಿ.ಮೀ. ಚಾಮರಾಜನಗರ ಜಿಲ್ಲಾ ಕೇಂದ್ರದಿಂದ = ೪೦ ಕಿ.ಮೀ. ಕೊಳ್ಳೇಗಾಲ ವಲಯ ಕರ್ನಾಟಕದ ದಕ್ಷಿಣ ಭಾಗದಲ್ಲಿರುವ ಗಡಿ ತಾಲ್ಲೂಕು, ಪ್ರಕೃತಿ ಸಂಪತ್ತು ಬಹಳಷ್ಟಿದ್ದು ಜಲಪಾತಗಳು, ದೇವಸ್ಥಾನಗಳನ್ನು ಹೊಂದಿದೆ. ವಲಯದ ಸ್ವಲ್ಪಭಾಗ ನೀರಾವರಿ ಹೊಂದಿದೆ. ಈ ಹಿಂದೆ ಈ ಪಟ್ಟಣದಲ್ಲಿ ಕೌಹಳ ಮತ್ತು ಗಾಲವ ಎಂಬ ಈರ್ವರು ಮಹರ್ಷಿಗಳು ನೆಲೆಸಿದ್ದರಿಂದ ಕೌಹಳಗಾಲವ ನಗರವಾಗಿ ಮುಂದೆ ಕೊಳ್ಳೇಗಾಲವೆಂದು ಪ್ರಸಿದ್ಧಿ ಪಡೆಯಿತು. ಇಲ್ಲಿಯ ರೇಷ್ಮೆ ಮಾರುಕಟ್ಟೆಯು ರೇಷ್ಮೆ ಬೆಳೆಗಾರರಿಗೆ ವರದಾನವಾಗಿದೆ. ಕೊಳ್ಳೇಗಾಲದ ಚಾರಿತ್ರಿಕ ಮುಖವನ್ನು ಅವಲೋಕಿಸಿದರೆ ಜನಪದ ನಾಯಕರಾಗಿ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿರುವ ಸತ್ ಸಂಕಲ್ಪಗಳಿಗೆ ಸದಾ ಪ್ರೇರಣೆ ನೀಡುತ್ತಿರುವ ಮಲೆ ಮಹದೇಶ್ವರ, ಮಂಟೇಸ್ವಾಮಿ, ರಾಚಪ್ಪಾಜಿಯಂತಹ ಜಂಗಮ ಶ್ರೇಷ್ಠರು ನಡೆದಾಡಿದ ಪುಣ್ಯಭೂಮಿ. ನಾಡಿನ ಹಿರಿಯ ಕವಿ ಷಟ್ ಶಾಸ್ತ್ರ ಕೋವಿದ ಶ್ರೀ ನಿಜಗುಣಶಿವಯೋಗಿ ನಂತರದ ಶ್ರೀ ಕುಮಾರ ನಿಜಗುಣಸ್ವಾಮಿ ಹಾಗೂ ಡಾ. ರಾಜ್‌ಕುಮಾರ್ ಸಿಂಗಾನಲ್ಲೂರಿನವರಾಗಿದ್ದು ಇವರೆಲ್ಲರಿಂದ ಸಾಂಸ್ಕೃತಿಕವಾಗಿ ಶ್ರೀಮಂತಗೊಂಡ ಪ್ರದೇಶವಾಗಿದೆ. ಮರಡಿಗುಡ್ಡ ಪವಾಡ ಪುರುಷ ಶ್ರೀ ಮಹದೇಶ್ವರರು ಮಂಡಿ ಊರಿದ ಸ್ಥಳ ಮರಡಿಗುಡ್ಡವಾಗಿದೆ. ಬಸ್ತೀಪುರ : ಪಟ್ಟಣದ ಉತ್ತರ ದಿಕ್ಕಿನಲ್ಲಿದ್ದು, ಜೈನ ಬಸದಿಗಳಿದ್ದ ಪುರಾವೆಗಳಿವೆ. ಇತರೆ ಸ್ಥಳಗಳು ಶ್ರೀ ಸುಬ್ರಮಣ್ಯೇಶ್ವರ ಸ್ವಾಮಿ ದೇವಸ್ಥಾನ, ಮಾಳಿಗೆ ಮಾರಮ್ಮ, ಸೋಮೇಶ್ವರ ಸ್ವಾಮಿ ದೇವಸ್ಥಾನ, ಚೌಡೇಶ್ವರಿ ದೇವಸ್ಥಾನ, ಮುರುಡೇಶ್ವರ ಸ್ವಾಮಿ ದೇವಸ್ಥಾನ, ಕನ್ನಿಕಾ ಪರಮೇಶ್ವರಿ ದೇವಸ್ಥಾನ, ಉಚ್ಛಾಲಮ್ಮ ದೇವಸ್ಥಾನ, ಮಕ್ಕಳ ಮಹದೇಶ್ವರ ದೇವಸ್ಥಾನ, ನಾರಾಯಣ ಸ್ವಾಮಿ ದೇವಸ್ಥಾನ ಹಾಗೂ ಕಲ್ಯಾಣಿ. ಚಿಲಕವಾಡಿ ಕೊಳ್ಳೇಗಾಲ ತಾಲ್ಲೂಕು ಕೇಂದ್ರದಿಂದ = ೧೨ ಕಿ.ಮೀ. ಚಾಮರಾಜನಗರ ಜಿಲ್ಲಾ ಕೇಂದ್ರದಿಂದ = ೫೨ ಕಿ.ಮೀ. ಇದೊಂದು ಧಾರ್ಮಿಕ ಹಾಗೂ ಕವಿಗಳ ಊರು. ಇಲ್ಲಿ ಶ್ರೀ ಶಂಭುಲಿಂಗೇಶ್ವರರ ಬೆಟ್ಟವಿದ್ದು, ದುರ್ಗಾಂಭ ದೇವಿಯ ದೇವಸ್ಥಾನ ಕೂಡ ಇದೆ. ದೀಪಾವಳಿಯ ಸಂದರ್ಭದಲ್ಲಿ ವರ್ಷಕ್ಕೊಮ್ಮೆ ಸ್ವಾಮಿಯ ಉತ್ಸವ ನಡೆಯುತ್ತಿದ್ದು, ಜಾತ್ರೆ ಕೂಡ ಏರ್ಪಾಡಾಗುತ್ತದೆ. ದೇವಸ್ಥಾನದ ಸಮೀಪದಲ್ಲಿ ಅನುಭವ ಮಂಟಪ ಇದ್ದು, ಕುಮಾರ ನಿಜಗುಣ ಸ್ವಾಮಿಗಳವರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಾರೆ. ಇವರು ಬರೆದ ’ಬೋಳು ಬಸವನ ಬೊಂತೆ” ಒಂದು ಅಮರ ಕೃತಿ. ಇವರು ಸಂಸಾರಿಕ ಜೀವನವನ್ನು ತ್ಯಜಿಸಿ, ಶ್ರೀ ಸಿದ್ಧಗಂಗೆಯ ಡಾ. ಶಿವಕುಮಾರ ಸ್ವಾಮೀಜಿಗಳವರಿಂದ ದೀಕ್ಷೆಯನ್ನು ಪಡೆದು ವಿರಕ್ತಿ ಮಾರ್ಗದೆಡೆಗೆ ನಡೆದಿದ್ದಾರೆ. ಈ ಸ್ಥಳದಲ್ಲಿ ಶ್ರೀ ನಿಜಗುಣಶಿವಯೋಗಿಗಳು ತಪೋಗೈದ ಗುಹೆ ಇದೆ. ಕುಂತೂರು ಕೊಳ್ಳೇಗಾಲ ತಾಲ್ಲೂಕು ಕೇಂದ್ರದಿಂದ = ೧೦ ಕಿ.ಮೀ. ಚಾಮರಾಜನಗರ ಜಿಲ್ಲಾ ಕೇಂದ್ರದಿಂದ = ೫೦ ಕಿ.ಮೀ. ಈ ಗ್ರಾಮದಲ್ಲಿ ಶ್ರೀ ಪ್ರಭುದೇವಸ್ವಾಮಿಯವರ ಬೆಟ್ಟ ಇದ್ದು, ವರ್ಷಕ್ಕೊಮ್ಮೆ ಸ್ವಾಮಿಗೆ ಹಾಲೆರೆವ ಉತ್ಸವ ಹಾಗೂ ಜಾತ್ರೆ ನಡೆಯುತ್ತದೆ. ಬೆಟ್ಟದ ತಪ್ಪಲಿನ ಪರಿಸರದಲ್ಲಿ ಶ್ರೀ ಮಹದೇಶ್ವರ ಸಹಕಾರ ಸಕ್ಕರೆ ಕಾರ್ಖಾನೆ ಇದ್ದು, ಈವಾಗ ಶ್ರೀ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ಸುತ್ತಮುತ್ತಲಿನ ಕಬ್ಬು ಬೆಳೆಗಾರರಿಗೆ ವರದಾನವಾಗಿದೆ. ಇಲ್ಲಿ ಕಾರ್ಖಾನೆಯ ನೌಕರರಿಗೆ ವಸತಿಗೃಹಗಳಿದ್ದು, ಕಾಲೋನಿಯೊಂದು ನಿರ್ಮಾಣಗೊಂಡಿದೆ. ಊರಿನ ಕೇಂದ್ರಸ್ಥಳದಲ್ಲಿ ದಾಸೋಹ ಮಠವಿದ್ದು, ಈ ಮಠದಲ್ಲಿ ಹಿಂದೆ ಶ್ರೀ ಮಾದೇಶ್ವರರವರು ಬಂದು ಹೋಗಿದ್ದ ಐತಿಹ್ಯವಿದೆ. ಶ್ರೀ ಮಠದಲ್ಲಿ ಅನ್ನದಾಸೋಹ ನಡೆಯುತ್ತದೆ. ಶ್ರೀ ಸಿದ್ಧೇಶ್ವರ ಕ್ಷೇತ್ರ ಕೊಳ್ಳೇಗಾಲ ತಾಲ್ಲೂಕು ಕೇಂದ್ರದಿಂದ = ೩ ಕಿ.ಮೀ. ಚಾಮರಾಜನಗರ ಜಿಲ್ಲಾ ಕೇಂದ್ರದಿಂದ = ೪೩ ಕಿ.ಮೀ. ಹೊಂಡರಬಾಳು ಶ್ರೀ ಸಿದ್ಧೇಶ್ವರ ಕ್ಷೇತ್ರವು ಪುರಾಣ ಪ್ರಸಿದ್ಧವಾದ ಸ್ಥಳವಾಗಿದೆ. ಗಿರಿಯಲ್ಲಿ ಗುಹೆಗಳು ಅಧಿಕವಾಗಿವೆ. ತುಟ್ಟತುದಿಯಲ್ಲಿರುವ ಮೊದಲ ಗುಹೆ ವಿಶಾಲವಾದುದು. ಪೂಜಾ ಬಾಗಿಲು, ದರ್ಶನ ಬಾಗಿಲು, ಸ್ವರ್ಗದ ಬಾಗಿಲು ಈ ರೀತಿ ೦೩ ಬಾಗಿಲುಗಳಿವೆ. ಪೂಜೆಯನ್ನು ಭಕ್ತರು ದರ್ಶನದ ಬಾಗಿಲ ಹತ್ತಿರ ಬಂದು ಮಾಡಿಸುತ್ತಾರೆ. ಸ್ವರ್ಗದ ಬಾಗಿಲ ಬಗ್ಗೆ ಒಂದು ದಂತಕಥೆಯಿದ್ದು, ಒಮ್ಮೆ ಮಕ್ಕಳಿಲ್ಲದ ದಂಪತಿಗಳು ಮಗುವಾದರೆ ಅದನ್ನು ಅದರ ಆಭರಣ ಉಡುಪಿನ ಜೊತೆ ನಿನಗರ್ಪಿಸುತ್ತೇವೆಂದು ವಿಚಿತ್ರ ಹರಕೆ ಹೊತ್ತರು. ಮಗುವಾಯಿತು. ಬಹಳ ದಿನಗಳ ನಂತರ ಮಗುವನ್ನು ಸಿಂಗರಿಸಿ ದೇವರ ದರ್ಶನಕ್ಕೆ ಹೋದರು. ಮಗು ಸ್ವರ್ಗದ ಬಾಗಿಲಲ್ಲಿ ಹೋಗಿ ಮತ್ತೆ ಹಿಂತಿರುಗಲಿಲ್ಲ. ಈಗಲೂ ಕೆಲವು ಸಂರ್ದಬ ಗುಹೆಯಲ್ಲಿ ಮಗುವಿನ ಗೆಜ್ಜೆಯ ಸದ್ದು ಕೇಳಿಸುವುದೆಂದು ಪ್ರತೀತಿ ಇದೆ. ಕುರುಬನ ಕಟ್ಟೆ ಕೊಳ್ಳೇಗಾಲ ತಾಲ್ಲೂಕು ಕೇಂದ್ರದಿಂದ = ೮ ಕಿ.ಮೀ. ಚಾಮರಾಜನಗರ ಜಿಲ್ಲಾ ಕೇಂದ್ರದಿಂದ = ೫೮ ಕಿ.ಮೀ. ಕೊಳ್ಳೇಗಾಲದ ಪಕ್ಕದಲ್ಲಿರುವ ಕುರುಬನ ಕಟ್ಟೆಯು ಶೀ ಮಂಟೆಸ್ವಾಮಿ ಯವರು ತಪಗೈದ ಸ್ಥಳ. ಇಲ್ಲಿ ಸೋಮವಾರ ಮತ್ತು ಶುಕ್ರವಾರ ವಿಶೇಷ ಪೂಜೆಗಳು ನಡೆಯುತ್ತದೆ. ಪರಮ ಪರಂಜ್ಯೋತಿ ನೀವೇ ಬನ್ನಿ, ಮಂಟೇದ ಲಿಂಗಯ್ಯ ನೀವೇ ಬನ್ನಿ ಎಂದು ಹಾಡುವ ನೀಲಗಾರರ ಮೇಳ ಈ ಸ್ಥಳದಲ್ಲಿ ಕಾಣಬಹುದು. ಈ ಸ್ಥಳದ ಪಕ್ಕದಲ್ಲಿ ಕರಳಕಟ್ಟೆ ಎಂಬ ಗ್ರಾಮವಿದ್ದು, ಸೋಲಿಗರು ಇಲ್ಲಿ ವಾಸವಾಗಿದ್ದಾರೆ. ಕನಕಗಿರಿ ಕ್ಷೇತ್ರ ಕೊಳ್ಳೇಗಾಲ ತಾಲ್ಲೂಕು ಕೇಂದ್ರದಿಂದ = ೯ ಕಿ.ಮೀ. ಚಾಮರಾಜನಗರ ಜಿಲ್ಲಾ ಕೇಂದ್ರದಿಂದ = ೫೯ ಕಿ.ಮೀ. ಕ್ಷೇತ್ರವು ದೊಡ್ಡಿಂದವಾಡಿ ಗ್ರಾಮದ ಸನಿಹದಲ್ಲಿರುವ ಗಿರಿ ಪ್ರದೇಶ ಇಲ್ಲಿ ಪಾರ್ವತಿ ಮಲ್ಲಿಕಾರ್ಜುನಸ್ವಾಮಿ ದೇವಾಲಯವಿದೆ. ಪಂಚಲಿಂಗ ದರ್ಶನದಂದು ತಲಕಾಡಿನ ೦೫ ಲಿಂಗಗಳನ್ನು ದರ್ಶನ ಮಾಡಿ, ಕನಕಗಿರಿಯ ಪಾರ್ವತಿ-ಪರಮೇಶ್ವರರ ದರ್ಶನ ಪಡೆದರೆ ಕೈಲಾಸ ಪದವಿ ಪ್ರಾಪ್ತವಾಗುವುದೆಂದು ಪ್ರತೀತಿ ಇದೆ. ಆದ್ದರಿಂದಾಗಿ ಈ ದೇವರ ದರ್ಶನ ಪಡೆಯಲು ಭಕ್ತಾದಿಗಳು ಹೆಚ್ಚಾಗಿ ಬರುತ್ತಿದ್ದಾರೆ. ಇದೊಂದು ವೈದಿಕ ಮತ್ತು ಜಾನಪದ ಸಾಂಸ್ಕೃತಿಕ ಆಚರಣೆಯ ಸಂಗಮ, ಇಲ್ಲಿನ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ವೈದಿಕ ಪರಂಪರೆಯನ್ನು ಪ್ರತಿನಿಧಿಸಿದರೆ ’ಶ್ರೀ ಗುಡ್ಡದ ಮಾರಮ್ಮನ ದೇವಸ್ಥಾನ ಜಾನಪದ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಇಲ್ಲಿರುವ ಕೆಂಡಗಣ್ಣ ಸ್ವಾಮಿಗಳ ಗದ್ದುಗೆಯೂ ಪ್ರಮುಖವಾದುದಾಗಿದೆ. ಗುಂಡಾಲ್ ಜಲಾಶಯ ತಾಲ್ಲೂಕು ಕೇಂದ್ರದಿಂದ = ೨೭ ಕಿ.ಮೀ. ಜಿಲ್ಲಾ ಕೇಂದ್ರದಿಂದ = ೬೭ ಕಿ.ಮೀ. ಕೊಳ್ಳೇಗಾಲದಿಂದ ಲೊಕ್ಕನ ಹಳ್ಳಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಎದುರಾಗುವುದೇ ಗುಂಡಲ್ ಅರಣ್ಯ. ಇಲ್ಲಿ ಬೆಟ್ಟ ಗುಡ್ಡಗಳಿವೆ, ಅಡ್ಡಲಾಗಿ ಆಕರ್ಷಕವಾಗಿ ಜಲಾಶಯವನ್ನು ನಿರ್ಮಿಸಲಾಗಿದೆ. ಸುಂದರ ಪರಿಸರ ಬಯಸುವವರಿಗೆ ಇದು ಅಚ್ಚುಮೆಚ್ಚಿನ ತಾಣವಾಗಿದೆ. ವಾಸ್ತವ್ಯಕ್ಕೆ ಪ್ರವಾಸಿ ಬಂಗಲೆಯಿದೆ. ಈ ಜಲಾಶಯದಿಂದ ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಚಿಕ್ಕಲ್ಲೂರು ತಾಲ್ಲೂಕು ಕೇಂದ್ರದಿಂದ = ೨೭ ಕಿ.ಮೀ. ಜಿಲ್ಲಾ ಕೇಂದ್ರದಿಂದ = ೬೭ ಕಿ.ಮೀ. ಶ್ರೀ ಚಕ್ಕಲ್ಲೂರು ಪುಣ್ಯಕ್ಷೇತ್ರವು ಧರೆಗೆ ದೊಡ್ಡವರು ಮಂಟೇಸ್ವಾಮಿಯವರ ಶಿಷ್ಯರಾದ ಸಿದ್ದಪ್ಪಾಜಿಯವರು ಐಕ್ಯವಾದ ಸ್ಥಳವಾಗಿದೆ. ಪವಾಡ ಪುರುಷ ಶ್ರೀ ಸಿದ್ದಪ್ಪಾಜಿಯವರು ನಿಡುಗಟ್ಟ ಗ್ರಾಮದ ಮುದ್ದೋಜಿ ಲಿಂಗವಂತ ಪಂಚಾಳದವರು, ಆತನ ಕಿರಿಯ ಮಗ ಕೆಂಪಣ್ಣ ಮಂಟೇಸ್ವಾಮಿಯ ಶಿಷ್ಯರಾಗಿ ಅನೇಕ ಪವಾಡಗಳನ್ನು ಮೆರೆಸಿ, ಕೊನೆಯಲ್ಲಿ ಚಿಕ್ಕಲ್ಲೂರು ಬಂದು ಐಕ್ಯವಾಗುತ್ತಾರೆ. ಈ ಕ್ಷೇತ್ರದಲ್ಲಿ ಪ್ರತೀ ವರ್ಷ ಜನವರಿ ಮಾಸದಲ್ಲಿ ಬರುವ ಪೌರ್ಣಿಮೆ ದಿನ ಸಂಕ್ರಾಂತಿಯ ಸಮಯದಲ್ಲಿ ಚಂದ್ರಮಂಡಲ ಆರಂಭದಿಂದ ಪಂತಿ ಸೇವೆಯಲ್ಲಿ ಮುಕ್ತಾಯವಾಗುವ ೦೫ ದಿನಗಳ ಜಾತ್ರೆ ನಡೆಯುತ್ತದೆ. ಪ್ರತೀ ಸೋಮವಾರ ಮತ್ತು ಶುಕ್ರವಾರ ವಿಶೇಷ ಪೂಜೆ ನಡೆಯುತ್ತದೆ. ಕಾವೇರಿ ನದಿಯು ಸನಿಹದಲ್ಲಿ ಹರಿಯುತ್ತದೆ. ಸಮೀಪದಲ್ಲಿಯೇ ಮುತ್ತತ್ತಿರಾಯನ ಕ್ಷೇತ್ರವಿದೆ. ಉಗನಿಯ ತಾಲ್ಲೂಕು ಕೇಂದ್ರದಿಂದ = ೧೨ ಕಿ.ಮೀ. ಜಿಲ್ಲಾ ಕೇಂದ್ರದಿಂದ = ೫೨ ಕಿ.ಮೀ. ವಾಸವಾಡಿ ಶ್ರೀ ವೀರಭದ್ರೇಶ್ವರ ಸ್ವಾಮಿ ಸನ್ನಿಧಿ : ಕೊಳ್ಳೇಗಾಲದಿಂದ ಬೆಂಗಳೂರು ರಸ್ತೆಯಲ್ಲಿ ಕ್ರಮಿಸಿ ಧನಗೆರೆ ಊರಿನಿಂದ ಸ್ವಲ್ಪದೂರ ಮುಂದೆ ಹೋದಾಗ ಒಂದು ಕಚ್ಚಾ ರಸ್ತೆಯ ಮೂಲಕ ತಲುಪಿದಾಗ ಸಿಗುವ ಭವ್ಯ ದೇವಾಲಯ ಶ್ರೀ ವಾಸವಾಡಿ ವೀರಭದ್ರೇಶ್ವರ ಸನ್ನಿದಿ ಹಲವಾರು ಭಕ್ತರ ಸಮೂಹ ಹೊಂದಿರುವ ಅತಿ ಪುರಾತನ ದೇವಾಲಯ ಇದಾಗಿದೆ. ದೇವಾಲಯದಲ್ಲಿ ತಯಾರಿಸಿ ನೀಡುವ ಅನ್ನ ಚಟ್ನಿ ತುಂಬಾ ವಿಶೇಷವಾದ ಪ್ರಸಾದವಾಗಿದೆ. ಪ್ರತಿ ವರ್ಷ ಮಹಾಶಿವರಾತ್ರಿಯಂದು ಅನ್ನಬ್ರಹ್ಮೋತ್ಸವವ ನಡೆಯಲಿದ್ದು ತುಂಬಾ ಸಂಖ್ಯೆಯ ಭಕ್ತಾದಿಗಳು ಸೇರಿ ರಾತ್ರಿ ಪೂರ್ತಿ ಜಾಗರಣೆ ಮಾಡುತ್ತಾರೆ. ದೇವಾಲಯದ ಪಕ್ಕದಲ್ಲಿ ಕೆರೆ ಇದ್ದು ಸುತ್ತಲಿನ ಪರಿಸರ ಸುಂದರ ಹಾಗೂ ಆಕರ್ಷಣೀಯವಾಗಿದೆ. ಶಿವನ ಸಮುದ್ರ ತಾಲ್ಲೂಕು ಕೇಂದ್ರದಿಂದ = ೧೮ ಕಿ.ಮೀ. ಜಿಲ್ಲಾ ಕೇಂದ್ರದಿಂದ = ೫೮ ಕಿ.ಮೀ. ಕಾವೇರಿ ನದಿ ತೀರದಲ್ಲಿದೆ. ಇಲ್ಲಿನ ವೈಷ್ಣವ, ಶೈವ ಹಾಗೂ ಶಕ್ತಿ ದೇವತೆಗಳಿಗೆ ಸೋಮೇಶ್ವರ ದೇವಾಲಯ ಬಹಳ ಪ್ರಾಚೀನವಾದ ದೇವಾಲಯ. ಇದರ ಸಮೀಪ ಶಕ್ತಿ ದೇವತೆ ಶಿವನ ಸಮುದ್ರ ಮಾರಮ್ಮ ಬಹಳ ಪ್ರಸಿದ್ಧ ದೇವಾಲಯ. ಭಯ- ಭಕ್ತಿಯಿಂದ ಜನರು ಇಲ್ಲಿಗೆ ಬಂದು, ಹೊತ್ತ ಹರಕೆಯನ್ನು ತೀರಿಸುವ ವಾಡಿಕೆ ಇಂದಿಗೂ ಕಂಡು ಬರುತ್ತದೆ. ವೈಷ್ಣವ ದೇವಾಲಯವಾದ ವೆಂಕಟರಮಣ ಸ್ವಾಮಿ ದೇವಸ್ಥಾನ ಬಹಳ ವಿಶಾಲವಾದುದು. ಶಯನ ಭಂಗಿಯಲ್ಲಿರುವ ವಿಷ್ಣುವಿನ ಮೂರ್ತಿ ಇದೆ. ಇದಕ್ಕೆ ಮಧ್ಯರಂಗ ಎಂಬ ಹೆಸರಿನಲ್ಲಿ ಪ್ರಸಿದ್ಧಿ ಹೊಂದಿದೆ. ಶ್ರೀರಂಗಪಟ್ಟಣದ ಆದಿರಂಗ, ಶಿವನ ಸಮುದ್ರದ ಮಧ್ಯರಂಗ, ತಮಿಳುನಾಡಿನ ಶ್ರೀರಂಗಂನ ಅಂತ್ಯರಂಗವನ್ನು ಸೂರ್ಯೋದಯದಿಂದ- ಸೂರ್ಯಾಸ್ತದವರೆಗೆ ನೋಡಿದವರಿಗೆ ಪುಣ್ಯ ಬರುತ್ತದೆ ಎಂದು ಪ್ರತೀತಿ ಇದೆ. ಪ್ರತೀ ವರ್ಷ ಜಾತ್ರೆ ಸೇರು ನಡೆಯುತ್ತದೆ. ಸೋಮೇಶ್ವರ ದೇವಸ್ಥಾನದಲ್ಲಿ ಶ್ರೀಚಕ್ರವಿದೆ. ವೆಸ್ಲಿ ಸೇತುವೆ ಶಿವನಸಮುದ್ರ ಪ್ರದೇಶದಲ್ಲಿ ಕಾವೇರಿನದಿಗೆ ಅಡ್ಡಲಾಗಿ ೩ ಸೇತುವೆಗಳನ್ನು ನಿರ್ಮಿಸಲಾಗಿದೆ. ಇದರಲ್ಲಿ ವೆಸ್ಲೆ ಸೇತುವೆ ಹಳೆಯಕಾಲದ ಇಂಜಿನಿಯರಿಂಗ್ ಕೌಶಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಬೂದಬಾಳು ಕ್ಷೇತ್ರ ತಾಲ್ಲೂಕು ಕೇಂದ್ರದಿಂದ = ೧೮ ಕಿ.ಮೀ. ಜಿಲ್ಲಾ ಕೇಂದ್ರದಿಂದ = ೫೮ ಕಿ.ಮೀ. ಬೂದಬಾಳು : ಕೊಳ್ಳೇಗಾಲ ತಾಲ್ಲೂಕಿನ ಬೂದಬಾಳು ಗ್ರಾಮದಲ್ಲಿ ಗುಡಿಹಟ್ಟಿ ವೆಂಕರಮಣಸ್ವಾಮಿ ಪ್ರಸಿದ್ಧ ದೇವಾಲಯವಿದೆ. ಇದು ಈ ಭಾಗದಲ್ಲಿ ಚಿಕ್ಕ ತಿರುಪತಿ ಎಂದು ಹೆಸರಾಗಿದೆ. ವರ್ಷದಲ್ಲಿ ಒಮ್ಮೆ ಜಾತ್ರೆ ನಡೆಯುತ್ತದೆ. ಇದು ಮೂರು ದಿನಗಳ ಜಾತ್ರೆಯಾಗಿದ್ದು ಮೊದಲ ದಿನ ತೇರು, ಎರಡನೇ ದಿನ ವಧೆ ಅಥವಾ ರಾಕ್ಷಸನ ಸಂಹಾರ. ಮೂರನೇ ದಿನ ವಸಂತೋತ್ಸವ ನಡೆಯುತ್ತದೆ. ತಾಲ್ಲೂಕಿನ, ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಕಡೆಗಳಿಂದ ಭಕ್ತಾದಿಗಳು ಇಲ್ಲಿಗೆ ಆಗಮಿಸುತ್ತಾರೆ. ದರ್ಗಾ ತಾಲ್ಲೂಕು ಕೇಂದ್ರದಿಂದ = ೨೦ ಕಿ.ಮೀ. ಜಿಲ್ಲಾ ಕೇಂದ್ರದಿಂದ = ೬೦ ಕಿ.ಮೀ. ಮುಸಲ್ಮಾನರ ಪವಿತ್ರ ಮತ್ತು ಧಾರ್ಮಿಕ ಪುಣ್ಯ ಕ್ಷೇತ್ರ. ಭೋರ್ಗರೆದು ಧುಮ್ಮಿಕ್ಕುವ ಕಾವೇರಿ ತಟದಲ್ಲಿದ್ದು, ಗಗನಚುಕ್ಕಿ ಜಲಪಾತವನ್ನು ಉಂಟು ಮಾಡುವ ಸ್ಥಳವಾಗಿದೆ. ಈ ಜಲಾಶಯ ಉಕ್ಕಿ ಹರಿಯುವ ನೀರಿನಿಂದ ರಮ್ಯ ಮನೋಹರವಾಗಿದೆ. ಈ ತಟದಿಂದ ನಿಂತು ನೋಡಿದರೆ ವಿಶ್ವವಿಖ್ಯಾತ ಏಷ್ಯಾ ಖಂಡದ ಪ್ರಪ್ರಥಮ ಜಲ ವಿದ್ಯುತ್ ಸ್ಥಾವರವಾದ ಬ್ಲಫ್‌ನ ಸುಂದರ ನೋಟ ಕಾಣಿಸುತ್ತದೆ. ಈ ದರ್ಗ ಹಿಂದು-ಮುಸಲ್ಮಾನರ ಐಕ್ಯದ ಸಂಕೇತವನ್ನು ಸೂಚಿಸುವ ಸ್ಥಳವಾಗಿದೆ. ಭರಚುಕ್ಕಿ ಇಲ್ಲಿಂದ ಸ್ವಲ್ಪ ದೂರ ಮುಂದೆ ಹೋದಾಗ ಜಗತ್ತಿನಲ್ಲಿಯೇ ಅಪರೂಪದ ಭೂಸೃಷ್ಟಿಯ ಅಚ್ಚರಿ ಕಾವೇರಿಯ ಆರ್ಭಟ ಭರಚುಕ್ಕಿ ಜಲಪಾತವಿದೆ. ಇಲ್ಲಿ ಸುಮಾರು ೧ ಕಿ.ಮೀ. ಅಗಲವಾಗಿ ಮೈದೆಳೆದಿರುವ ಕಾವೇರಿ ಸುಮಾರು ೭೫ ರಿಂದ ೧೦೦ ಅಡಿಯವರೆಗೆ ಭೂಮಿಯಿಂದ ಭೂಮಿಗೆ ಧುಮ್ಮಿಕ್ಕುವಳು. ಭರಚುಕ್ಕಿ ಮತ್ತು ಗಗನಚುಕ್ಕಿ ಜಲಪಾತ ವಿಶ್ವದ ಜಲಪಾತಗಳಲ್ಲಿ ೮೩ನೇ ಸ್ಥಾನವನ್ನು ಪಡೆದಿದೆ. ಯಡಕುರಿ ತಾಲ್ಲೂಕು ಕೇಂದ್ರದಿಂದ = ೧೪ ಕಿ.ಮೀ. ಜಿಲ್ಲಾ ಕೇಂದ್ರದಿಂದ = ೫೪ ಕಿ.ಮೀ. ಚಾಮರಾಜನಗರ ಜಿಲ್ಲೆಯ ಏಕೈಕ ದ್ವೀಪ ಸ್ಥಳ. ಕಾವೇರಿ ನದಿಯು ತಲ ಕಾವೇರಿಯಲ್ಲಿ ಉಗಮವಾಗಿ ತಾನು ಹರಿಯುವ ಉದ್ದಕ್ಕೂ ವೈಚಿತ್ರಗಳನ್ನು ಸೃಷ್ಟಿಮಾಡುತ್ತದೆ. ಇಂತಹ ವೈಚಿತ್ರ್ಯಗಳಲ್ಲಿ ಯಡಕುರಿಯ ಕೂಡ ಒಂದು. ಇಲ್ಲಿ ಕಾವೇರಿ ನದಿ ಕವಲೊಡೆದು ಎರಡು ಭಾಗಗಳಾಗಿ ಮುಂದೆ ಮತ್ತೆ ಒಂದಾಗಿ ಸೇರುತ್ತದೆ. ಈ ಒಂದಾಗಿ ಸೇರುವ ಸ್ಥಳಕ್ಕೆ ಕೂಡುಮೂಲೆ ಎಂದು ಅಲ್ಲಿನ ಜನರು ಕರೆಯುತ್ತಾರೆ. ಯಡಕುರಿಯ ಸುತ್ತಲೂ ನೀರಿನಿಂದ ಸುತ್ತುವರಿದ ದ್ವೀಪ ಊರು. ಊರಿಗೆ ಹೋಗಲು ಹರಿಗೋಲೆ ಬೇಕು. ಅಂಬಿಗಣ್ಣನ ಅಪ್ಪಣೆ ಇಲ್ಲದೆ ಊರಿಗೆ ಪ್ರವೇಶವಿಲ್ಲ. ಇಲ್ಲಿಗೆ ವಿಶೇಷವಾಗಿ ಪಕ್ಷಿಗಳು ವಲಸೆ ಬರುವುದನ್ನು ಕಾಣಬಹುದು. ಚಾಮರಾಜನಗರದ ತಾಲೂಕುಗಳು ಚಾಮರಾಜನಗರ ಯಳಂದೂರು ಕೊಳ್ಳೇಗಾಲ ಗುಂಡ್ಲುಪೇಟೆ ಹನೂರು ಚಾರಣ ಬಂಡಿಪುರ ಬಿಳಿಗಿರಿ ಬೆಟ್ಟ ಮಹದೇಶ್ವರ ಬೆಟ್ಟ ಗೋಪಾಲಸ್ವಾಮಿ ಬೆಟ್ಟ ಇವುಗಳು ಚಾಮರಾಜನಗರದಲ್ಲಿರುವ ಪ್ರಸಿದ್ದ ಚಾರಣ ಸ್ಥಳವಾಗಿವೆ. ಇದನ್ನೂ ನೋಡಿ ಚಾಮರಾಜನಗರ (ಲೋಕ ಸಭೆ ಚುನಾವಣಾ ಕ್ಷೇತ್ರ) ಉಲ್ಲೇಖಗಳು ಬಾಹ್ಯ ಸಂಪರ್ಕಗಳು Mystery Trails - Eco-tourism in Chamarajanagar List of cities and Tourism places in Chamarajanagar Maps Of India - Map of Chamarajanagar district ಚಾಮರಾಜನಗರ ಜಿಲ್ಲೆ ಕರ್ನಾಟಕದ ಜಿಲ್ಲೆಗಳು ಕರ್ನಾಟಕದ ಪ್ರಮುಖ ಸ್ಥಳಗಳು
1036
https://kn.wikipedia.org/wiki/%E0%B2%97%E0%B2%A6%E0%B2%97
ಗದಗ
ಗದಗ (Gadag) (गदग) ಉತ್ತರ ಕರ್ನಾಟಕದ ಒಂದು ಜಿಲ್ಲೆ. ಗದಗ ಪಟ್ಟಣ ಈ ಜಿಲ್ಲೆಯ ಕೇಂದ್ರ. ಕೆಲವು ವರ್ಷಗಳ ಹಿಂದಿನವರೆಗೂ ಗದಗ, ಧಾರವಾಡ ಜಿಲ್ಲೆಯ ಭಾಗವಾಗಿದ್ದಿತು. ಈ ಜಿಲ್ಲೆಯ ಜನಸಂಖ್ಯೆ ಸುಮಾರು ೧೦ ಲಕ್ಷ. marked by Ornate pillars with intricate sculpture ಇತಿವೃತ್ತ ಗದಗ ಜಿಲ್ಲೆಯು ಪುರಾತನ ಕವಿಗಳಿಗೆ ಪ್ರಸಿದ್ಧ. ಕುಮಾರವ್ಯಾಸ, ಪಂಪ, ಲಕ್ಷ್ಮೀಶ ಮೂಲತಃ ಗದಗದವರು. ಆಧುನಿಕ ಕವಿಗಳಾದ ಆಲೂರು ವೆಂಕಟರಾಯ, ಚೆನ್ನವೀರ ಕಣವಿ ಕೂಡ ಇದೇ ಜಿಲ್ಲೆಗೆ ಸೇರಿದವರು. ಇಲ್ಲಿ ಬೆಳೆಯಲ್ಪಡುವ ಮುಖ್ಯ ಬೆಳೆಗಳು ರಾಗಿ, ಬೇಳೆಗಳು, ನೆಲಗಡಲೆ, ಸೂರ್ಯಕಾಂತಿ, ಹತ್ತಿ, ಈರುಳ್ಳಿ ಮತ್ತು ಮೆಣಸಿನಕಾಯಿ. ಧಾರ್ಮಿಕ ಪ್ರಾಮುಖ್ಯತೆಯುಳ್ಳ ಇಲ್ಲಿನ ಎರಡು ಮುಖ್ಯ ದೇವಸ್ಥಾನಗಳೆ೦ದರೆ ತ್ರಿಕೂಟೇಶ್ವರ ದೇವಾಲಯ ಮತ್ತು ವೀರನಾರಾಯಣನ ದೇವಸ್ಥಾನ. ಗದಗ ಪಟ್ಟಣದಲ್ಲಿ ಎರಡು ಮುಖ್ಯ ಜೈನ ದೇವಾಲಯಗಳು ಸಹ ಇದ್ದು ಪಾರ್ಶ್ವನಾಥ ತೀರ್ಥಂಕರ ಮತ್ತು ಮಹಾವೀರನಿಗೆ ಅರ್ಪಿತವಾಗಿವೆ.ಇದರ ಜೊತೆಗೆ ಇತಿಹಾಸ ಪ್ರಸಿದ್ಧ ಲಕ್ಕುಂಡಿ ದೇವಾಲಯಗಲಿರುವುದೂ ಗದಗ ಜಿಲ್ಲೆಯಲ್ಲಿಯೇ. ಗದಗ ಪಟ್ಟಣದಲ್ಲಿ ಅತೀ ಹೆಚ್ಚಿನ ಮುದ್ರಣಾಲಯಗಳಿದ್ದವು. ಮುದ್ರಣಾಲಯಗಒಂದು ಕಾಲದಲ್ಲಿ ಗದಗ ಶಹರದಲ್ಲಿ ಎಲ್ಲೇ ನಿಂತು ಕಲ್ಲು ತೂರಿದರೂ ಅದು ಯಾವದಾದರೊಂದು ಪ್ರಿಂಟಿಂಗ್ ಪ್ರೆಸ್ ಗೆ ಹೋಗಿ ಬೀಳುತ್ತದೆಂಬ ಪ್ರತೀತಿ ಇತ್ತು.ಅಷ್ಟೊಂದು ಮುದ್ರಣಾಲಯಗಳು ಗದಗನಲ್ಲಿದ್ದವು. ಮುದ್ರಣ ಕ್ಷೇತ್ರದಲ್ಲಿ ಕರ್ನಾಟಕದಲ್ಲೇ ಗದಗನ್ನು ಮೀರಿಸಿದವರಿರಲಿಲ್ಲ. ಗದಗ ಪಟ್ಟಣ ಬದನೇಕಾಯಿ ಬಜಿ,ಒಗ್ಗರಣೆ ಗಿರ್ಮಿಟ್ ಮತ್ತು ಮೆಣಸಿನಕಾಯಿ ಮಿರ್ಚಿಗೆ ತುಂಬ ಖ್ಯಾತಿಪಡೆದುಕೊಂಡಿದೆ. ಭೀಷ್ಮ ಕೆರೆ ಇಲ್ಲಿನ ಅತ್ಯಂತ ದೊಡ್ಡದಾದ ಮತ್ತು ಪುರಾತನ ಕೆರೆಯಾಗಿದೆ. ಗದಗ ಪುರಾತನ ಕಾಲದಲ್ಲಿ "ಕೃತಪುರ" ಎಂದು ಖ್ಯಾತಿಗಳಿಸಿತ್ತು. ಭಾರತ ರತ್ನ ಭೀಮಸೇನ ಜೋಶಿ ಇಲ್ಲಿಯವರೇ. ಗದುಗಿನ ಅನೇಕ ಜನ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಗದಗ ಮತ್ತು ಬೆಟಗೇರಿ ಅವಳಿ ನಗರಗಳು ಗದಗ ಜಿಲ್ಲೆಯ ಗದಗ ತಾಲೂಕಿನ ಕಣಗಿನಹಾಳದಲ್ಲಿ ಸನ್ 1905 ಇಸವಿಯಲ್ಲಿ ಏಷ್ಯಾ ಖಂಡದಲ್ಲೇ ಪ್ರಪ್ರಥಮ ಬಾರಿಗೆ ಸ್ಥಾಪನೆಯಾದ ಸಹಕಾರ ಸಂಘವಿದೆ. ಗದಗಿನ ಮೂಲ ಹೆಸರುಗಳು ಕೃತುಕ, ಕೃತುಪುರ, ಕರಡುಗು ನಂತರ ಗಲದುಗು , ಗದುಗು ಮತ್ತು ಈಗ ಗದಗ ಎಂದು ಕರೆಯಲಾಗುತ್ತದೆ. ಕಪ್ಪತ ಗುಡ್ಡ ಸಹ ಇದರ ಸುತ್ತಮುತ್ತಲಲ್ಲೇ ಇವೆ. ಭೂಗೋಳ ಗದಗ ಜಿಲ್ಲೆಯಲ್ಲಿ ಹರಿಯುವ ಎರಡು ಮುಖ್ಯ ನದಿಗಳೆಂದರೆ ಮಲಪ್ರಭಾ ಮತ್ತು ತುಂಗಭದ್ರಾ. ಗದಗ ಪಟ್ಟಣ ಬೆಂಗಳೂರಿನಿಂದ ೪೩೧ ಕಿಮೀ ದೂರದಲ್ಲಿದ್ದು ಧಾರವಾಡದಿಂದ ೮೦ ಕಿಮೀ ದೂರದಲ್ಲಿದೆ. ಗದಗ ಕರ್ನಾಟಕದ ೨೯ ನೇ ಜಿಲ್ಲೆ ಆಗಿರುತ್ತದೆ. ತಾಲೂಕುಗಳು ಗದಗ ಜಿಲ್ಲೆಯಲ್ಲಿರುವ ತಾಲೂಕುಗಳು ಗದಗ ಶಿರಹಟ್ಟಿ ಮುಂಡರಗಿ ರೋಣ ನರಗುಂದ ಲಕ್ಷ್ಮೇಶ್ವರ ಗಜೇಂದ್ರಗಡ ಪ್ರಮುಖ ವ್ಯಕ್ತಿಗಳು ಕನ್ನಡ ಪಂಚತಂತ್ರ ನಿರ್ಮಾಣ ಮಾಡಿದ ಕವಿ ನಯಸೇನ ಕನ್ನಡದ ಮಹಾಕವಿ ಪಂಪ ಕನ್ನಡದ ಮಹಾಕವಿ ಕುಮಾರವ್ಯಾಸ ಕವಿ ಹುಯಿಲಗೋಳ ನಾರಾಯಣರಾಯರು ಪ್ರಸಿದ್ಧ ಗಾಯಕರಾದ ಗಾನಯೋಗಿ ಪಂಚಾಕ್ಷರಿಗವಾಯಿ ಡಾ.ಪಂ.ಪುಟ್ಟರಾಜ ಕವಿ ಗವಾಯಿಗಳವರು. ಭಾರತರತ್ನ ಭೀಮಸೇನ ಜೋಶಿ ಶ್ರೀ ಬಿ.ಜಿ.ಅಣ್ಣಿಗೇರಿ ಗುರುಗಳು.ಇವರು ಗದಗ ನಗರದಲ್ಲಿ ಸುಮಾರು 60 ವರ್ಷಗಳ ಕಾಲ ಹತ್ತಾರು ಸಾವಿರ ವಿದ್ಯಾರ್ಥಿಗಳಿಗೆ ಯಾವುದೇ ಪಲಾಪೇಕ್ಷೆ ಇಲ್ಲದೆ ಸಂಪೂರ್ಣ ಉಚಿತ ಶಿಕ್ಷಣ ನೀಡುತ್ತಿದ್ದ ಇವರು ಸೆಪ್ಟೆಂಬರ್ 5 2019 ಶಿಕ್ಷಕರ ದಿನಾಚರಣೆಯಂದೆ ನಿಧನರಾದರು. ಬಿ.ಎಸ್.ಎಫ್. ಜವಾನ್, ಬಸವರಾಜ ಯರಗಟ್ಟಿ ಕೇದಾರಪ್ರಕೃತಿ ವಿಕೋಪದಲ್ಲಿ ರಕ್ಷಣಾ ಕಾರ್ಯದಲ್ಲಿ -ಹುತಾತ್ಮ ಯೋಧ ಕ್ರಿಕೆಟ್ ಸುನಿಲ್‌ ಜೋಷಿ ಸೈಕ್ಲಿಂಗ್‌ ನೀಲಮ್ಮಾ ಮಲ್ಲಿಗವಾಡ ರಾಜ್ಯೋತ್ಸವ ಪ್ರಶಸ್ತಿ ವಿಜೀತ (ನೀಲಗುಂದ ಚಾರಿತ್ರಿಕ ಘಟನೆಗಳು ಕೈಗಾರಿಕೆ ಗದಗಿನ ಬಹಳ ಮುಖ್ಯವಾದ ಕೈಗಾರಿಕೆ ಗದಗ ಪ್ರಿಂಟಿಂಗ್ ಪ್ರೆಸ್ ಹಾಗು ಸುಮಾರು ೧೦೦ಕ್ಕೂ ಹೆಚ್ಚು ಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ದಿಮೆಗಳಿವೆ. ಸಂಕೇಶ್ವರ, ಶಾಬಾದಿಮಠ , ಹೊಂಬಾಳಿ, ವಿದ್ಯಾವಿಕಾಸ, ವಿದ್ಯಾನಿಧಿ, ಪಾರು ಪ್ರಕಾಶನ ಮುಂತಾದ ಪ್ರಸಿದ್ಧ ಪ್ರಿಂಟಿಂಗ್ ಪ್ರೆಸ್ ಗಳು ಇವೆ. ಕೈಮಗ್ಗ ಹಾಗೂ ಬಣ್ಣ ಬಣ್ಣದ ಆಕರ್ಷಕ ಸೀರೆಗಳನ್ನು ನೇಯುವ ಹತ್ತಾರು ಮಂದಿ ನೇಕಾರರು ಇಲ್ಲಿದ್ದಾರೆ ಇದು ಗದಗ ಮತ್ತು ಬೆಟಗೇರಿಯ ಇನ್ನೊಂದು ಆಕರ್ಷಣೆ. ಪವನ ವಿದ್ಯುತ್ ಗದಗ ಜಿಲ್ಲೆಯ ೪೦&೫೦ ಕಿಮೀ ಉದ್ದಗಲದ ಕೃಷಿಭೂಮಿಯು ಹೆಚ್ಚು ಗಾಳಿ ಬೀಸುವ ಪ್ರದೇಶವೆಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕೆ.ಆರ್ ಇ.ಡಿ.ಎಲ್) ಗುರುತಿಸಿದೆ. ಪವನ ವಿದ್ಯುತ್ ಶಕ್ತಿ ಉತ್ಪಾದನೆಗೆ ಯೋಗ್ಯ ಸ್ಥಳಗಳೆಂದೂ ಈ ಸಂಸ್ಥೆ ಪಟ್ಟಿ ಮಾಡಿದೆ. ಗಂಗಾಪೂರ ಸಕ್ಕರೆ ಕಾರ್ಖಾನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಗಂಗಾಪೂರ ಗ್ರಾಮದಲ್ಲಿ ಮಾಜಿ ಸಚಿವ ಎಸ್ . ಎಸ್. ಪಾಟೀಲ್ ಇವರ ನೇತೃತ್ವದಲ್ಲಿ ಮೃಡಗಿರಿ ಸಹಕಾರಿ ಸಕ್ಕರೆ ಕಾರ್ಖಾನೆ ಎಂದು ರೈತರ ಸಹಕಾರದೊಂದಿಗೆ ಕಾರ್ಖಾನೆ ಸ್ಥಾಪಿಸಿದ್ದು ಇರುತ್ತದೆ. ನಂತರ ಕೆಲವು ಆಡಳಿತಾತ್ಮಕ ಹಾಗೂ ಆರ್ಥಿಕ ಸಮಸ್ಯೆಯಿಂದಾಗಿ ಸದರಿ ಕಾರ್ಖಾನೆಯನ್ನು ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಒಡತನದ ಸಂಸ್ಥೆಗೆ ೩೦ ವರ್ಷಗಳ ಗುತ್ತಿಗೆ ಆಧಾರದಲ್ಲಿ ಕೊಟ್ಟಿದ್ದು ಇಂದು ಅದು ವಿಜಯ ನಗರ ಸಕ್ಕರೆ ಕಾರ್ಖಾನೆ ನಿಗಮ ನಿಯಮಿತ, ಗಂಗಾಪೂರ ಎಂಬ ಹೆಸರಿನಲ್ಲಿ ನಡೆಯುತ್ತಿದೆ. ಇದು ಗದಗ ಜಿಲ್ಲೆಯಲ್ಲಿಯೇ ಬೃಹತ್ ಕೈಗಾರಿಕ ಪ್ರದೇಶವಾಗಿದ್ದು ಸಾವಿರಾರು ಉದ್ಯೋಗವನ್ನು ಒದಗಿಸಿದೆ. ಸಕ್ಕರೆ ತಯಾರಿಕೆ ಜೊತೆಗೆ ತ್ಯಾಜ್ಯಗಳನ್ನು ಉಪಯೋಗಿಸಿಕೊಂಡು ಸ್ಪಿರಿಟ್ ಮತ್ತು ಗೊಬ್ಬರ ತಯಾರಿಕ ಘಟಕಗಳನ್ನು ಸ್ಥಾಪಿಸಲಾಗಿದೆ.. . . ಅಮಸೂ(ಅಂಗಂ) ಧಾರ್ಮಿಕ ಧಾರ್ಮಿಕ ಪ್ರಾಮುಖ್ಯತೆಯುಳ್ಳ ಇಲ್ಲಿನ ಎರಡು ಮುಖ್ಯ ದೇವಸ್ಥಾನಗಳೆ೦ದರೆ ತ್ರಿಕೂಟೇಶ್ವರ ದೇವಾಲಯ ಮತ್ತು ವೀರನಾರಾಯಣನ ದೇವಸ್ಥಾನ. ಗದಗ ಪಟ್ಟಣದಲ್ಲಿ ಎರಡು ಮುಖ್ಯ ಜೈನ ದೇವಾಲಯಗಳು ಸಹ ಇದ್ದು ಪಾರ್ಶ್ವನಾಥ ತೀರ್ಥಂಕರ ಮತ್ತು ಮಹಾವೀರನಿಗೆ ಅರ್ಪಿತವಾಗಿವೆ.ಶ್ರೀ ತೊಂಟದಾರ್ಯ ಮಠ ಕೂಡ ಇಲ್ಲಿನ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ತನ್ನದೇ ಆದ ಕೊಡುಗೆಯನ್ನು ನೀಡುತ್ತಲಿದೆ. ಶ್ರೀ ತೊಂಟದಾರ್ಯ ಮಠ ಹಾಲಕೆರೆ ಅನ್ನದಾನೇಶ್ವರ ಮಠ ಶಿವಾನಂದ ಮಠ ವೀರೇಶ್ವರ ಪುಣ್ಯಾಶ್ರಮ ಡೋಣಿ ಹಾಲೇಶ್ವರ ಮಠ ಶೈಕ್ಷಣಿಕ ಗದಗ ಪಟ್ಟಣ ಅನೇಕ ವಿದ್ಯಾಲಯ, ಮಹಾವಿದ್ಯಾಲಯಗಳಿವೆ. ಒಂದು ಆಯುರ್ವೇದ ಮತ್ತು ತಾಂತ್ರಿಕ ವಿದ್ಯಾಲಯಗಳಿವೆ. ಪ್ರಮುಖ ವಿದ್ಯಾಸಂಸ್ಥೆಗಳು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಗಳು ,ಗದಗ (ಸರ್ಕಾರಿ) ಸರಕಾರಿ ಪ್ರಥಮ ದಜೆ೯ ಕಾಲೇಜು, ಮುಂಡರಗಿ. ಸರಕಾರಿ ಪ್ರಥಮ ದಜೆ೯ ಕಾಲೇಜು, ಗದಗ. ಸರಕಾರಿ ಪ್ರಥಮ ದಜೆ೯ ಕಾಲೇಜು, ಹುಲಕೋಟಿ. ಸರಕಾರಿ ಪ್ರಥಮ ದಜೆ೯ ಕಾಲೇಜು,ರೋಣ. ಸರಕಾರಿ ಪ್ರಥಮ ದಜೆ೯ ಕಾಲೇಜು, ಗಜೇಂದ್ರಗಡ. ಸರಕಾರಿ ಪ್ರಥಮ ದಜೆ೯ ಕಾಲೇಜು, ನರಗುಂದ. ಸರಕಾರಿ ಪ್ರಥಮ ದಜೆ೯ ಕಾಲೇಜು, ಶಿರಹಟ್ಟಿ. ಸರಕಾರಿ ಪ್ರಥಮ ದಜೆ೯ ಕಾಲೇಜು, ನರೇಗಲ್ಲ. ಶ್ರೀ ಅನ್ನದಾನೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ನರೇಗಲ್ಲ. ಕೆ. ಎಸ್. ಎಸ್, ಕಾಲೇಜು, ನರೇಗಲ್ಲ ಸರಕಾರಿ ಪ್ರಥಮ ದಜೆ೯ ಕಾಲೇಜು, ಮುಳಗುಂದ. ಸರ್ಕಾರಿ ಪದವಿ ಪೂರ್ವ ಕಾಲೇಜು,ಗದಗ : ಇತ್ತೀಚೆಗೆ ಈ ಕಾಲೇಜು,ಮುಳಗುಂದ ರಸ್ತೆಯಲ್ಲಿರುವ ನೂತನ ಕಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಕೆ ಎಲ್ ಇ ಕಾಲೇಜು.ಗದಗ ದಿನ ಪತ್ರಿಕೆ 'ನವೋದಯ' ದಿನಪತ್ರಿಕೆ 'ನಾಗರಿಕ' ದಿನಪತ್ರಿಕೆ 'ಕೌರವ' ದಿನಪತ್ರಿಕೆ 'ಕಿತ್ತೂರ ಕರ್ನಾಟಕ' ದಿನಪತ್ರಿಕೆ ಶಿಲ್ಪಕಲೆ ಗದಗ ಜಿಲ್ಲೆ ಶಿಲ್ಪಕಲೆಯ ಬೀಡೂ ಹೌದು. ಗದುಗಿನ ವೀರನಾರಾಯಣ, ತ್ರಿಕುಟೇಶ್ವರ ಹಾಗೂ ಸೋಮನಾಥ, ಸರಸ್ವತಿ ದೇವಾಲಯ ಪ್ರಸಿದ್ಧಿ ಪಡೆದಿವೆ. ಕ್ರಿ.ಪೂ. 950 ರಲ್ಲಿ ಪದ್ಮಬ್ಬರಸಿ ಕಟ್ಟಿಸಿದ ನರೇಗಲ್ಲದ ನಾರಾಯಣ ದೇವಾಲಯ, ರಾಷ್ಟ್ರಕೂಟರು ಕಟ್ಟಿಸಿದ ಜೈನ ದೇವಾಲಯ ಗಳಲ್ಲಿಯೇ ಅತಿ ದೊಡ್ಡದು ಆಗಿದೆ. ಶ್ರೀ ಅನ್ನದಾನೇಶ್ವ್ಹರ ಮಠ ಪ್ರಸಿದ್ಢವಾಗಿವೆ. ಲಕ್ಕುಂಡಿ ನೂರೊಂದು ಗುಡಿಗಳು ಆಕರ್ಷಣೀಯ. ಇಲ್ಲಿನ ಸೂರ್ಯ ದೇವಾಲಯ, ಬ್ರಹ್ಮ ಜೀನಾಲಯ ಗಮನ ಸೆಳೆಯುತ್ತವೆ. ಲಕ್ಷ್ಮೇಶ್ವರದ ಸೋಮೇಶ್ವರ ದೇವಾಲಯ ರಾಷ್ಟ್ರೀಯ ಸಂರಕ್ಷಣಾ ಸ್ಮಾರಕವಾಗಿ ರೂಪುಗೊಂಡಿದೆ. ಜಿಲ್ಲೆಯಲ್ಲಿ ಶಿಲ್ಪಕಲೆಗೆ ಜೀವ ತುಂಬಿದವರು ರಾಜವಂಶಸ್ಥರು. ಅನೇಕ ರಾಜಮಹಾರಾಜರು ಈ ಭಾಗದಲ್ಲಿ ಆಳಿದ್ದರೆಂಬುದು ಗಮನಾರ್ಹ. ಇನ್ನು ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಶಾಸನಗಳಿವೆ. ಸಾಂಸ್ಕೃತಿಕ ಪರಂಪರೆ ನಮ್ಮೂರ ಜಾತ್ರೆ: ಇಲ್ಲಿ ನಡೆಯುವ ವಾರ್ಷಿಕ ಶ್ರೀ ತೊಂಟದಾರ್ಯ ಮಠದ ಜಾತ್ರೆ ಸಾಕಷ್ಟು ಭಕ್ತರನ್ನು ಆಕರ್ಷಿಸುತ್ತದೆ. ಹಾಗೂ ಈ ಜಾತ್ರೆ ೧ ತಿ೦ಗಳವರೆಗೆ ನಡೆಯುತ್ತದೆ. ಮುಖ್ಯ ಭಾಷೆ ಕನ್ನಡ ಸಂಗೀತ ಮತ್ತು ಕಲೆ ಪಂಡಿತ ರುದ್ರಮುನಿ ಹಿರೇಮಠ ಪಂಡಿತ ಪಂಚಾಕ್ಷರಿಸ್ವಾಮಿ ಮತ್ತಿಗಟ್ಟಿ ಪಂಡಿತ ವೀರೆಶ್ವರ ಹಿರೇಮಠ( ರಾಜ್ಯೋತ್ಸವ ಪ್ರಶಸ್ತಿ ೨೦೦೫) ಶ್ರೀಮತಿ ಪಾರ್ವತಿ ಮಾಳೆಕೊಪ್ಪಮಠ ವಾಯಲಿನ್: ಶ್ರೀ ನಾರಾಯನ ಹಿರೆಕೊಲಚೆ ವೊಕಲ್ : ಶ್ರೀ ರವೀಂದ್ರ ಜಕಾತಿ ವೃತ್ತಿರಂಗಭೂಮಿ ಕಂಪನಿಗಳು ಶ್ರೀ ಕುಮಾರೇಶ್ವರ ಕೃಪಾ ಕಟಾಕ್ಷ ಪಂಚಾಕ್ಷರಿ ಗವಾಯಿಗಳ ನಾಟ್ಯ ಸಂಘ - ನಾಟಕ ಗದಗ ದತ್ತಾತ್ರೇಯ ನಾಟಕ ಮಂಡಳಿ - ನಾಟಕ ಯರಾಸಿ ಭರಮಪ್ಪನ ವಾಣಿ ವಿಲಾಸ ನಾಟಕ ಕಂಪನಿ- ನಾಟಕ ಕಲಾ ವಿಕಾಸ ಪರಿಷತ್ತು ಸಾಧನೆ ಪಂಡಿತ ಡಾ.ಪುಟ್ಟರಾಜ ಗವಾಯಿಗಳ - ಸಂಗೀತ ಫ. ಸಿ. ಭಾಂಡಗೆ - ನಾಟಕ ಹುಯಿಲಗೋಳ ನಾರಾಯಣರಾಯ - ನಾಡ ಗೀತೆ : ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಜಾನಪದ ಕಲೆ ಶ್ರೀ ಹೊಸಗರಡಿ ಜಾನಪದ ಕಲಾ ಮೇಳ (ರಿ) ಗದಗ -ಬೆಟಗೇರಿ - ದೊಡ್ಡಾಟ ಸ್ವತಂತ್ರ ಹೋರಾಟಗಾರರು ಮತ್ತು ಗಾಂಧೀವಾದಿಗಳು ಶ್ರೀ. ಶಂಕ್ರಪ್ಪ ಕಂಪ್ಲಿ- ಆಝಾದ ಹಿಂದ ಸೇವಾ ದಳ ಮತ್ತು ಕ್ಷತ್ರೀಯ ಮರಾಠ ಸಮಾಜ ಸ್ಥಾಪಕರು. ಪ್ರಮುಖ ಬೆಳೆಗಳು ಜೋಳ, ಸಜ್ಜೆ, ಸೇಂಗಾ, ಸೂರ್ಯಪಾನ, ಉಳ್ಳಾಗಡ್ಡಿ(ಈರುಳ್ಳೆ). ಪ್ರಮುಖ ಆಹಾರ ಧಾನ್ಯ ಜೋಳ.ಜೊತೆಗೆ ಗೋಧಿ, ಬೇಳೆಕಾಳುಗಳು. ಸೇವಂತಿಗೆ ಮತ್ತಿತರ ಹೂ ಬೆಳೆ ಹೂವಿನ ಕಣಜ : ಜಮೀನಿನಲ್ಲಿ ಸೇವಂತಿಗೆ, ಮಲ್ಲಿಗೆ, ಸುಗಂಧರಾಜ, ಗುಲಾಬಿ, ಚೆಂಡು ಹೂ ಬೆಳೆದಿದ್ದಾರೆ. ವಿಶೇಷವಾಗಿ ಸೇವಂತಿಗೆ ಹೂವನ್ನೇ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಾರೆ. (ವಿಶೇಷವಾಗಿ ದಸರಾ, ದೀಪಾವಳಿಗೆ ಹೂವಿಗೆ ಬೇಡಿಕೆ) ಹವಾಮಾನ ಬೆಸಿಗೆ-ಚಳಿಗಾಲ- ಜಿಲ್ಲೆಯ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ ౪೧.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿವರೆಗೆ (ಡಿಸೆಂಬರನಲ್ಲಿ) ಉಷ್ಣತೆ ಇರುತ್ತದೆ. ಬೆಸಿಗೆ - ೩೦ °C-೩೯ °C , ಚಳಿಗಾಲ - ೧೮ °C-೨೮ °C ಮಳೆ - ಪ್ರತಿ ವರ್ಷ ಮಳೆ ಸರಾಸರಿ ೧೬.೬ ಮಿಮಿ ಗಳಸ್ಟು ಆಗಿರುತ್ತದೆ. ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ) ಇರುತ್ತದೆ. ಸಮೀಪದ ಸ್ಥಳಗಳು ‍ಲಕ್ಕುಂಡಿ ಡಂಬಳ ಶಿರಹಟ್ಟಿ ಲಕ್ಷ್ಮೇಶ್ವರ ಪ್ರಮುಖ ರಾಜಕಾರಣಿಗಳು ಕೆ. ಹೆಚ್. ಪಾಟೀಲ , ಡಿ. ಆರ್. ಪಾಟೀಲ, ಹೆಚ್.ಕೆ.ಪಾಟೀಲ-ಮಾಜಿ ಸಚಿವರು, ಶ್ರೀಶೈಲಪ್ಪ ವಿ. ಬಿದರೂರ ಪ್ರವಾಸ ಪ್ರವಾಸ ಮಾರ್ಗ ೧ ಗದಗದಿಂದ ಪ್ರವಾಸ ಪ್ರಾರಂಭವಾಗಿ ಲಕ್ಕುಂಡಿ, ಗದುಗಿನ ತ್ರಿಕೂಟೇಶ್ವರ ,ವೀರನಾರಾಯಣ ದೇವಸ್ಥಾನ, ವೀರೇಶ್ವರ ಪುಣ್ಯಾಶ್ರಮ, ಸಾಯಿಬಾಬಾ ಮಂದಿರ , ರಾಮಕೃಷ್ಣಾಶ್ರಮ, ಜಿಲ್ಲಾ ಆಡಳಿತ ಭವನ ನಂತರ ಅಣ್ಣಿಗೇರಿಯ ಅಮೃತೇಶ್ವರ ದೇವಸ್ಥಾನ, ನವಲಗುಂದ ನಾಗಲಿಂಗಮಠ, ಇಟಗಿಯ ಭೀಮಾಂಬಿಕಾ ದೇವಸ್ಥಾನ, ಸೂಡಿ ಹಾಗೂ ಕಾಲಕಾಲೇಶ್ವರ ದೇವಸ್ಥಾನ ಮತ್ತು ಕುಕನೂರ ಬಳಿಯ ಇಟಗಿ ಮಹೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ. ಪ್ರವಾಸಕ್ಕೆ ಅಂದಾಜು ೧೯೫ ಕಿ.ಮೀಗಳು. ಪ್ರವಾಸ ಮಾರ್ಗ ೨ ಗದಗದಿಂದ ಪ್ರವಾಸ ಪ್ರಾರಂಭವಾಗಿ ಲಕ್ಕುಂಡಿ, ಗದುಗಿನ ತ್ರಿಕೂಟೇಶ್ವರ , ವೀರನಾರಾಯಣ ದೇವಸ್ಥಾನ , ವೀರೇಶ್ವರ ಪುಣ್ಯಾಶ್ರಮ, ಸಾಯಿಬಾಬಾ ಮಂದಿರ , ರಾಮಕೃಷ್ಟಾಶ್ರಮ, ಜಿಲ್ಲಾ ಆಡಳಿತ ಭವನ ನಂತರ ಅಣ್ಣಿಗೇರಿಯ ಅಮೃತೇಶ್ವರ ದೇವಸ್ಥಾನ , ಮುಳಗುಂದ ದಾವುಲಮಲಿಕ ದರ್ಗಾ, ಲಕ್ಷ್ಮೇಶ್ವರದ ಸೋಮೇಶ್ವರ ದೇವಸ್ಥಾನ, ಜೈನ್ ಬಸದಿ, ಮಾಗಡಿ ಪಕ್ಷಿಧಾಮ(ಗದುಗಿನ ಪಕ್ಷಿಕಾಶಿ), ಶಿರಹಟ್ಟಿ ಫಕೀರೇಶ್ವರ ಮಠ, ವೆಂಕಟಾಪುರದ ವೆಂಕಟೇಶ ದೇವಸ್ಥಾನ ಹಾಗೂ ಡಂಬಳದ ದೊಡ್ಡ ಬಸಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ. ಪ್ರವಾಸಕ್ಕೆ ಅಂದಾಜು ೧೬೫ ಕಿ.ಮೀಗಳು. ರಸ್ತೆ ಸಾರಿಗೆ ವಾಯವ್ಯ .ಕ.ರಾ.ಸಾ.ಸಂಸ್ಥೆ ವಿಭಾಗ. ಗದಗ ಪಟ್ಟಣ ಸಾರಿಗೆ ಮತ್ತು ರೈಲು ಸಂಪರ್ಕ ಹೊಂದಿದೆ. ಸರಕಾರೇತರ ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಸಾರಿಗೆ ವಾಹನಗಳು (ಬಸ್ ಗಳು) ಜಿಲ್ಲೆಯಾದ್ಯಂತ ಸಂಚರಿಸುತ್ತವೆ. ಗದಗದಿಂದ ಮುಂಬಯಿ, ಪೂನಾ, ಹೈದರಾಬಾದ, ತಿರುಪತಿ,ಬೆಂಗಳೂರು, ಮೈಸೂರಗಳಿಗೆ ಐಷಾರಾಮಿ ಬಸ್ಸುಗಳಿವೆ, ಹಾಗು ಹೈದರಾಬಾದ, ತಿರುಪತಿ,ಬೆಂಗಳೂರ , ಮುಂಬಯಿ ರೈಲುಗಳು ಓಡುತ್ತವೆ. ವಿಮಾನ ನಿಲ್ದಾಣ ಹಾಗೂ ಬಂದರು ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಕಾರವಾರ ಬಂದರು ಗದಗ ಹತ್ತಿರದಲ್ಲಿವೆ.ಹುಬ್ಬಳ್ಳಿ ವಿಮಾನ ನಿಲ್ದಾಣ ಗದಗ ಪಟ್ಟಣದಿಂದ ೫೮ ಕಿ.ಮೀ ಮತ್ತು ಕಾರವಾರ ಬಂದರು ೨೩೫ ಕಿ.ಮೀ ದೂರದಲ್ಲಿವೆ. ಹೆದ್ದಾರಿ ರಾಷ್ಟ್ರೀಯ ಹೆದ್ದಾರಿ ೬೩: ನಗರದ ಹೃದಯ ಭಾಗದಲ್ಲಿ ಹಾಯ್ದು ಹೋಗುವ ರಸ್ತೆಗೆ ಇನ್ನೂ ಹೆಸರಿಡಲಾಗಿಲ್ಲ. ಕ್ರೀಡಾಂಗಣ ಜಿಲ್ಲಾ ಕ್ರೀಡಾಂಗಣ : ಕೆ. ಹೆಚ್. ಪಾಟೀಲ‍‍‍ ಕ್ರೀಡಾಂಗಣ ನಗರ ಆಡಳಿತ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ಪದ್ಧತಿ ವಾರ್ಡ್ ಗಳು ನಗರದಲ್ಲಿ ಒಟ್ಟು ೩೫ ವಾರ್ಡ್ ಗಳು ಇರುತ್ತವೆ. ಗದಗನ ಪ್ರಮುಖ ಬಡಾವಣೆಗಳು ಹೊಸ ಬಡಾವಣೆಗಳು, ಮಸಾರಿ ,ಸಿದ್ದಲಿಂಗ ನಗರ , ವಿರೇಶ್ವರ ನಗರ ಊರಿನ ಸರ್ವತೋಮುಖ ಬೆಳವಣಿಗೆಯಾಗಿದೆ. ಮಸಾರಿ ಸಿದ್ದಲಿಂಗ ನಗರ ವಿರೇಶ್ವರ ನಗರ ಗ೦ಗಾಪೂರ ಪೇಟ ಸಿನಿಮಾ ಚಿತ್ರ ಮಂದಿರಗಳು ನಗರದಲ್ಲಿ ೬ ಸುಂದರ ಚಿತ್ರ ಮಂದಿರಗಳು ಇರುತ್ತವೆ, ಅವುಗಳು ಮಹಾಲಕ್ಷ್ಮಿ, ಶ್ರೀ ಕೃಷ್ಣ, ಚಿತ್ರಾ, ಕರ್ನಾಟಕ, ವೆಂಕಟೇಶ, ಮತ್ತು ಶಾಂತಿ ಚಿತ್ರ ಮಂದಿರಗಳು. ಖಾದ್ಯ ಗದಗ ಪಟ್ಟಣ ಬದನೇಕಾಯಿ ಬಜಿ,ಒಗ್ಗರಣೆ ಗಿರ್ಮಿಟ್ ಮತ್ತು ಮೆಣಸಿನಕಾಯಿ ಮಿರ್ಚಿಗೆ(ಮಿರ್ಚಿ ಭಜಿ) ತುಂಬ ಪ್ರಸಿದ್ಧ.'' ಚಿತ್ರ ಗ್ಯಾಲರಿ ಬಾಹ್ಯ ಸಂಪರ್ಕಗಳು ಗದಗ ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ ರಾಜ್ಯಸರ್ಕಾರದ ಗದಗ ಅಂತರ್ಜಾಲ ಗದಗ-ಬೆಟಗೇರಿ.ಕಾಂ ಗದಗ ಜಿಲ್ಲೆಯ ನಕ್ಷೆ ಗದಗಿನ ವೈಭವ ಬಲ್ಲಿರಾ ಉಲ್ಲೇಖಗಳು ಕರ್ನಾಟಕದ ಜಿಲ್ಲೆಗಳು ಗದಗ ಜಿಲ್ಲೆ ಗದಗ ಪಕ್ಷಿಧಾಮಗಳು ಕರ್ನಾಟಕ ಪಕ್ಷಿಧಾಮಗಳು ಭಾರತದ ಪಕ್ಷಿಧಾಮಗಳು ರಾಷ್ಟ್ರೀಯ ಉದ್ಯಾನಗಳು ಕರ್ನಾಟಕ ಉದ್ಯಾನಗಳು ಭಾರತದ ಉದ್ಯಾನಗಳು ನಿಸರ್ಗ ಪ್ರವಾಸ ಪ್ರವಾಸೋದ್ಯಮ ಕರ್ನಾಟಕದ ಪ್ರಮುಖ ಸ್ಥಳಗಳು
1037
https://kn.wikipedia.org/wiki/%E0%B2%AE%E0%B2%82%E0%B2%A1%E0%B3%8D%E0%B2%AF
ಮಂಡ್ಯ
ಮಂಡ್ಯ ಕರ್ನಾಟಕದ ಒಂದು ಜಿಲ್ಲೆ - ಮಂಡ್ಯ ಜಿಲ್ಲೆಯ ಜಿಲ್ಲಾ ಕೇಂದ್ರಸ್ಥಳ ಮಂಡ್ಯ ನಗರ. ಮಂಡ್ಯವು ಮೈಸೂರು ಮತ್ತು ಬೆಂಗಳೂರು ನಗರಗಳ ನಡುವೆ ಇದೆ. ಬೆಂಗಳೂರಿನಿಂದ ಸುಮಾರು ೧೦೦ ಕಿಮೀ ದೂರದಲ್ಲಿದೆ. ಮಂಡ್ಯ ಜಿಲ್ಲೆಯ ಒಟ್ಟು ವಿಸ್ತೀರ್ಣ ೪೮೫೦ ಚ. ಕಿಮೀ. ೨೦೧೧ ರ ಜನಗಣತಿಯಂತೆ ಇಲ್ಲಿನ ಮಂದಿಎಣಿಕೆ ೧೭,೬೧,೭೧೮(೮೮೭೩೦೭ ಗಂಡಸರು, ೮೭೪೪೧೧ ಹೆಂಗಸರು). ಇಲ್ಲಿಯ ಮಂದಿ ಪ್ರಮುಖ ಕಸುಬು ಆರಂಬ. ಜಿಲ್ಲೆಯ ಪ್ರಮುಖ ಬೆಳೆ ಕಬ್ಬು ಹಾಗೂ ಭತ್ತ. ಮಂಡ್ಯ ನಗರವು ೭೬° ೧೯' ಮತ್ತು ೭೭° ೨೦' ಪೂರ್ವ ರೇಖಾಂಶ ಮತ್ತು ೧೨° ೧೩' ಮತ್ತು ೧೩° ೦೪' ಉತ್ತರ ಅಕ್ಷಾಂಶಗಳಲ್ಲಿ ವಿಸ್ತರಿಸಿದೆ. ಜಿಲ್ಲೆಯ ಸಂಕ್ಷಿಪ್ತ ಪರಿಚಯ ಮಂಡ್ಯ ಜಿಲ್ಲೆಯು ೧೯೩೯ರಲ್ಲಿ ರೂಪುಗೊಂಡಿತು. ಪ್ರಸ್ತುತ ಉತ್ತರಕ್ಕೆ ಹಾಸನ ಮತ್ತು ತುಮಕೂರು ಜಿಲ್ಲೆಗಳಿಂದ, ಪೂರ್ವಕ್ಕೆ ತುಮಕೂರು ಮತ್ತು ಬೆಂಗಳೂರು ಜಿಲ್ಲೆಗಳಿಂದ ಮತ್ತು ಪಶ್ಚಿಮದಲ್ಲಿ ಹಾಸನ ಮತ್ತು ಮೈಸೂರು ಜಿಲ್ಲೆಗಳಿಂದ ಸುತ್ತುವರಿದಿದೆ. ಮಂಡ್ಯ ಜಿಲ್ಲೆ ೭ ತಾಲ್ಲೂಕುಗಳನ್ನು ಒಳಗೊಂಡಿದೆ. ಜಿಲ್ಲೆಯ ಒಟ್ಟು ಭೌಗೋಳಿಕ ಪ್ರದೇಶವು ೪,೯೮,೨೪೪ ಹೆಕ್ಟೇರ್ ಆಗಿದೆ. ಅದರಲ್ಲಿ ೨,೫೩,೦೬೭ ಹೆಕ್ಟೇರ್ಗಳು ಬಿತ್ತನೆಯ ಪ್ರದೇಶವನ್ನು ರೂಪಿಸುತ್ತವೆ. ಜಿಲ್ಲೆಯ ಒಟ್ಟು ಭೂ ಪ್ರದೇಶದ ಅರ್ಧಕ್ಕಿಂತಲೂ ಹೆಚ್ಚು ಕೃಷಿಗೆ ಬಳಕೆಯಾಗುತ್ತಿದೆ. ೯೪೭೭೯ ಹೆಕ್ಟೇರ್ ಭೂಮಿ ನೀರಾವರಿಗೊಳಪಟ್ಟಿದೆ. ೧೯.೨೫ ಲಕ್ಷದ ಒಟ್ಟು ಜನಸಂಖ್ಯೆಯೊಂದಿಗೆ ಸುಮಾರು ೫ ಲಕ್ಷ ಜನರನ್ನು ಕೃಷಿ ವಲಯದಲ್ಲಿ ಕೆಲಸಕ್ಕೆ ತೊಡಗಿದ್ದಾರೆ. ಹೆಚ್ಚು ಕನ್ನಡವನ್ನು ಮಾತನಾಡುವ ಜಿಲ್ಲೆಯಾಗಿದೆ. ಉನ್ನತ ಶಿಕ್ಷಣ ಮಂಡ್ಯ ವಿಶ್ವವಿದ್ಯಾಲಯ ಸರ್ ಎಂ. ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ತೂಬಿನಕೆರೆ - ಮೈಸೂರು ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ಪಿ. ಇ. ಎಸ್. ಶಿಕ್ಷಣ ಸಂಸ್ಥೆಗಳು: ಪದವಿ ಕಾಲೇಜು ಇಂಜಿನಿಯರಿಂಗ್ ಕಾಲೇಜು ಶಂಕರಗೌಡ ಬಿ. ಎಡ್. ಕಾಲೇಜು ಎಂ. ಕಾಂ. ಮತ್ತು ಎಂ. ಬಿ. ಎ. ಕಾಲೇಜು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) - ಮಂಡ್ಯ ವೈದ್ಯಕೀಯ ಕಾಲೇಜು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಉನ್ನತ ಕೇಂದ್ರ - ಹೊಳಲು ಸರ್ಕಲ್ ಕೃಷಿ ವಿಶ್ವವಿದ್ಯಾಲಯ ಬೆಂಗಳೂರು, ಕೃಷಿ ಮಹಾವಿದ್ಯಾಲಯ, V C ಫಾರ್ಮ್,ಮಂಡ್ಯ. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹೊರ ಆವರಣ ಕೇಂದ್ರ ಬಿ.ಹೊಸೂರು ಕಾಲೋನಿ ಮಂಡ್ಯ *ಭಾರತೀ ಕಾಲೇಜು ಭಾರತೀ ನಗರ (ಕೆ. ಎಮ್ ದೊಡ್ಡಿ ) ಭಾರತೀ ಪಾರ್ಮಸಿ ಕಾಲೇಜು, ಜಿ ಮಾದೇಗೌಡ ತಾಂತ್ರಿಕ ಕಾಲೇಜು ಸರ್ಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜು ಕೆ. ಎಮ್ ದೊಡ್ಡಿ ಹೆಚ್. ಕೆ ವೀರಣ್ಣಗೌಡ ಕಾಲೇಜು ಮದ್ದೂರು ಶಾಂತಿ ಕಾಲೇಜು ಮಳವಳ್ಳಿ ನೋಡಬಹುದಾದ ಜಾಗಗಳು ಶ್ರೀರಂಗಪಟ್ಟಣ ಕೃಷ್ಣರಾಜಸಾಗರ ಅಣೆಕಟ್ಟು ಮತ್ತು ಬೃಂದಾವನ ಉದ್ಯಾನ ಟಿಪ್ಪೂ ಅರಮನೆ, ಕೋಟೆಗಳು, ಗುಡಿಗಳು, ಸಂಗಮ ರಂಗನತಿಟ್ಟು ಕರಿಘಟ್ಟ ಪಾಂಡವಪುರ ಕುಂತಿಬೆಟ್ಟ ಮೇಲುಕೋಟೆ ನಾಗಮಂಗಲ ನಾಗಮಂಗಲ ಚನ್ನಕೇಶವಸ್ವಾಮಿ ಗುಡಿ ಬಿಂಡಿಗನವಿಲೆ ಗರುಡಸ್ವಾಮಿ ಗುಡಿ ಆದಿ ಚುಂಚನಗಿರಿ ಮದ್ದೂರು ಶಿವಪುರದ ಸತ್ಯಗ್ರಹ ಸೌಧ, ಮದ್ದೂರು ಅರೆತಿಪ್ಪೂರು, ಶ್ರವಣಪ್ಪನ ಬೆಟ್ಟ ಕೊಕ್ಕರೆ ಬೆಳ್ಳೂರು ಸೋಮನಳ್ಳಮ್ಮನ ಗುಡಿ ಹನುಮಂತನಗರ ಆತ್ಮಲಿಂಗೇಶ್ವರ ಗುಡಿ ಓದಪ್ಪನ ಗುಡಿ,ನಗರಕೆರೆ-ವೈದ್ಯನಾಥಪುರ ನಂಬಿನಾಯಕನಹಳ್ಳಿ ಪಟ್ಟಲದಮ್ಮನ ಗುಡಿ ಹೊಸಹೊಳಲು ದೇವಸ್ಥಾನ ಮಳವಳ್ಳಿ ಶಿವನ ಸಮುದ್ರ ಜಲಪಾತ (ಗಗನ ಚುಕ್ಕಿ ಮತ್ತು ಭರಚುಕ್ಕಿ) ಸೋಮನಾಥಪುರ ಮುತ್ತತ್ತಿ ಬೆಂಕಿ ಫಾಲ್ಸ್ ಗಾಣಾಳು,ಹಲಗೂರು ಭೀಮೇಶ್ವರಿ ಕೆರೆ ತೊಣ್ಣೂರು ಬಸರಾಳು ಮಾಧವರಾಯ ದೇವಸ್ಥಾನ ಕೆರಗೋಡು ಪಂಚಲಿಂಗೇಶ್ವರನ ಗುಡಿ ದೇವರ ಮನೆ ಮೂಡಿಗೆರೆ, ಕಾಲಭೈರವೇಶ್ವರ ವರಹನಾಥ ಕಲ್ಲಹಳ್ಳಿ ಲಕ್ಶ್ಮೀ ಭೂವರಹನಾಥ ಸ್ವಾಮಿ ಗುಡಿ ಕೃಷ್ಣರಾಜಪೇಟೆ ಹೇಮಗಿರಿ ಜಲಪಾತ ಮಂಡ್ಯ ಕೊಪ್ಪಲು - ಕಾವೇರಿ ಬೋರೇದೇವರ ದೇವಸ್ಥಾನ ಕುರುಬರ ಬಸ್ತಿ - ೧೯ ಅಡಿಯ ಜೈನ ಮಂದಿರ ಬಾಹುಬಲಿ ವಿಗ್ರಹ, ಕೃಷ್ಣರಾಜಪೇಟೆ. ರಾಗಿಮುದ್ದನಹಳ್ಳಿ - ಬೇಬಿ ಬೆಟ್ಟ ಮಹದೇಶ್ವರ ಸಿದ್ದಲಿಂಗೇಶ್ವರನ ಗುಡಿ ಕಿಕ್ಕೇರಿ ಲಕ್ಷ್ಮೀ ನರಸಿಂಹ ಸ್ವಾಮಿ ಗುಡಿ ತಾಲ್ಲೂಕುಗಳು ಮಂಡ್ಯ ಮದ್ದೂರು ಮಳವಳ್ಳಿ ಪಾಂಡವಪುರ ನಾಗಮಂಗಲ ಕೃಷ್ಣರಾಜಪೇಟೆ ಶ್ರೀರಂಗಪಟ್ಟಣ ಪ್ರಮುಖ ವ್ಯಕ್ತಿಗಳು ಬಿ.ಎಂ.ಶ್ರೀಕಂಠಯ್ಯ - ಕವಿ ತ್ರಿವೇಣಿ - ಕಾದಂಬರಿಗಾರ್ತಿ ಅಂಬರೀಷ್ - ನಟ, ರಾಜಕಾರಣಿ ಎ.ಎನ್.ಮೂತಿ೯ರಾವ್ - ಸಾಹಿತಿ ಕೆ.ಎಸ್.ನರಸಿಂಹಸ್ವಾಮಿ - ಕವಿ ಬಿ.ಎಸ್.ಯಡಿಯೂರಪ್ಪ - ರಾಜಕಾರಣಿ ಜಿ. ಮಾದೇಗೌಡ- ಕಾವೇರಿ ಚಳುವಳಿ ಹೋರಾಟಗಾರ ಮಂಡ್ಯ ರಮೇಶ್ - ಚಿತ್ರ ನಟ ಚಂದಗಾಲು ಬೋರಪ್ಪ - ತತ್ವಪದ ಗಾಯಕ, ಜನಪದ ಕಲಾವಿದ ಹ. ಕ. ರಾಜೇಗೌಡ - ಜಾನಪದ ಸಂಶೋಧಕ ಜಯಲಕ್ಷ್ಮಿ ಸೀತಾಪುರ - ಜಾನಪದ ವಿದ್ವಾಂಸೆ, ಲೇಖಕಿ ಟಿ. ಸತೀಶ್ ಜವರೇಗೌಡ - ಕವಿ, ಸಂಘಟಕ ಕೆ. ಎಸ್. ಎಲ್. ಸ್ವಾಮಿ - ಚಲನಚಿತ್ರ ನಿರ್ದೇಶಕರು ಪು. ತಿ. ನರಸಿಂಹಾಚಾರ್ - ಕವಿ ರಮ್ಯಾ- ನಟಿ ಹೊಳೆ/ನದಿಗಳು ಕಾವೇರಿ ಹೇಮಾವತಿ ಲೋಕಪಾವನಿ ಲಕ್ಷ್ಮಣತೀರ್ಥ ಶಿಂಷಾ ವೀರವೈಷ್ಣವಿ ಆರಂಬ ಮಂಡ್ಯ ಜಿಲ್ಲೆಗೆ ಪ್ರಮುಖ ನೀರು ಸರಬರಾಜಿನ ಆಗರ. ಕಾವೇರಿ ಹೊಳೆ, ಕೃಷ್ಣರಾಜಸಾಗರ ಅಣೆಕಟ್ಟಿನ ಮೂಲಕ. ಇಲ್ಲಿನ ಇತರ ಮುಖ್ಯ ಹೊಳೆಗಳೆಂದರೆ ಹೇಮಾವತಿ, ಲೋಕಪಾವನಿ, ಲಕ್ಷ್ಮಣತೀರ್ಥ ಮತ್ತು ಶಿಂಷಾ. ಇಲ್ಲಿ ಬೆಳೆಯಲ್ಪಡುವ ಬೆಳೆಗಳಲ್ಲಿ ಮುಖ್ಯವಾದವು ಕಬ್ಬು, ಬತ್ತ, ರಾಗಿ, ತೆಂಗು, ಅವರೆ, ಅಲಸಂದೆ, ಹುಚ್ಚೆಳ್ಳು, ವಾಣಿಜ್ಯ ಬೆಳೆ ಹಿಪ್ಪುನೇರಳೆ, ಮುಂತಾದವು. ಸಕ್ಕರೆ ಉತ್ಪಾದನೆಯ ಕಾರಣ ಮಂಡ್ಯ "ಸಕ್ಕರೆಯ ಜಿಲ್ಲೆ ", "ಮಧುರ ಮಂಡ್ಯ" ಎನಿಸಿಕೊಂಡಿದೆ. ಬಾಹ್ಯ ಅಂತರಜಾಲ ತಾಣಗಳು http://www.karunadu.gov.in/gazetteer/GazetteerMandya2009/Chapter-14.pdf http://www.mandya.nic.in/ ಕರ್ನಾಟಕದ ಜಿಲ್ಲೆಗಳು ಕರ್ನಾಟಕದ ಪ್ರಮುಖ ಸ್ಥಳಗಳು ಮಂಡ್ಯ ಜಿಲ್ಲೆ
1038
https://kn.wikipedia.org/wiki/%E0%B2%B0%E0%B2%BE%E0%B2%AF%E0%B2%9A%E0%B3%82%E0%B2%B0%E0%B3%81%20%E0%B2%9C%E0%B2%BF%E0%B2%B2%E0%B3%8D%E0%B2%B2%E0%B3%86
ರಾಯಚೂರು ಜಿಲ್ಲೆ
ರಾಯಚೂರು ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿರುವ, ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಜಿಲ್ಲೆ. ರಾಯಚೂರು ಜಿಲ್ಲೆಯ ಜನಸಂಖ್ಯೆ ೨೦೦೧ ರ ಜನಗಣತಿಯಂತೆ ೧೬,೪೮,೨೧೨. ರಾಯಚೂರು ಜಿಲ್ಲೆಯಲ್ಲಿ ೭ ತಾಲೂಕುಗಳಿವೆ: ರಾಯಚೂರು, ದೇವದುರ್ಗ, ಸಿಂಧನೂರು, ಮಾನವಿ,, ಲಿಂಗಸುಗೂರು, ಮಸ್ಕಿ , ಸಿರವಾರ . ಜಿಲ್ಲಾಕೇಂದ್ರ ರಾಯಚೂರು ನಗರ. ಇದು ಬೆಂಗಳೂರಿನಿಂದ ೪೦೯ ಕಿ. ಮೀ. ದೂರದಲ್ಲಿದೆ. ಇತಿಹಾಸ ಸಾಮ್ರಾಟ್ ಅಶೋಕನ ಕುರಿತ ದೇಶದ ಅತಿಮುಖ್ಯ ಶಿಲಾಶಾಸನಗಳಲ್ಲಿ ಒಂದೆನಿಸಿದ ಮಸ್ಕಿ ಶಾಸನವು, ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ದೊರೆತಿರುವುದು ರಾಯಚೂರಿನ ಶ್ರೀಮಂತ ಇತಿಹಾಸಕ್ಕೆ ಒಂದು ಐತಿಹಾಸಿಕ ಸಾಕ್ಷಿ. ಭಾರತದ ಸ್ವಾತಂತ್ರ ಹೋರಾಟ ಮತ್ತು ನಂತರದ ಹೈದ್ರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟದಲ್ಲಿ ಈ ಜಿಲ್ಲೆಯ ಜನತೆಯ ಪಾತ್ರ ಪ್ರಮುಖವಾದುದು. ರಾಯಚೂರು ಕೋಟೆ ರಾಯಚೂರು ನಗರದ ಚಾರಿತ್ರಿಕ ಆಕರ್ಷಣೆಗಳಲ್ಲಿ ಒಂದು - ಇದನ್ನು ೧೨೯೪ ರಲ್ಲಿ ಕಟ್ಟಲಾಯಿತು. ರಾಯಚೂರಿನ ಇನ್ನೊಂದು ವಿಶೇಷತೆಯೆಂದರೆ ವಿಜಯನಗರ ಸಾಮ್ರಾಜ್ಯ ಮತ್ತು ಬಹುಮನಿ ಸಾಮ್ರಾಜ್ಯಗಳ ಅರಸರ ಕಾಲದಲ್ಲಿ ಈ ಪ್ರದೇಶ ಹೋರಾಟದ ನೆಲವಾಗಿತ್ತು. ರಾಯಚೂರು ಜಿಲ್ಲೆ ನವೆಂಬರ್ 1, 1956 ರಂದು ರಾಜ್ಯ ಮರು ಸಂಘಟನೆಯಾಗುವವರೆಗೂ ಹೈದರಾಬಾದ್ ರಾಜ್ಯದಲ್ಲಿ ಒಂದು ಭಾಗವಾಗಿತ್ತು. ಜಿಲ್ಲೆಯ ದಾಖಲೆಯ ಇತಿಹಾಸವನ್ನು ಮೂರನೇ ಕ್ರಿ.ಪೂ: ಶತಮಾನದ ಅಶೋಕನ ಮೂರು ಚಿಕ್ಕ ಶಿಲಾ ಶಾಸನಗಳು ಈ ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನಲ್ಲಿರುವ ಮಸ್ಕಿ ಮತ್ತು ಕೊಪ್ಪಲ್ ಸಮೀಪದ ಇನ್ನೆರಡರಲ್ಲೂ ಕಂಡುಬರುತ್ತವೆ ಎಂದು ಈ ಪ್ರದೇಶವು ಮಹಾನ್ ಮೌರ್ಯ ರಾಜ ಅಶೋಕನ (273 – 236 ಬಿ.ಸಿ.) ಆಡಳಿತದಲ್ಲಿ ಸೇರಿದೆ ಎಂದು ಸಾಬೀತುಪಡಿಸುತ್ತದೆ. ಆ ಸಮಯದಲ್ಲಿ, ಈ ಪ್ರದೇಶವು ಅಶೋಕನ ವೈಸ್ರಾಯ್ ಅಥವಾ ಮಹಾಮತ್ರ ಆಡಳಿತದಡಿಯಲ್ಲಿತ್ತು. ಕ್ರಿಶ್ಚಿಯನ್ ಯುಗದ ಆರಂಭದಲ್ಲಿ, ಜಿಲ್ಲೆಯು ಸತಾವಾಹನಗಳ ಸಾಮ್ರಾಜ್ಯದ ಭಾಗವಾಗಿದೆ ಎಂದು ಕಾಣುತ್ತದೆ. ಕ್ರ.ಶ 3 ನೇ ಮತ್ತು 4 ನೇ ಶತಮಾನದ ನಲ್ಲಿ ಆಳಿದ ವಕತಕರು ಸ್ವಲ್ಪ ಕಾಲ ರಾಯಚೂರಿನ ಮೇಲೆ ನಿಂತಿದ್ದರು ಎಂದು ತೋರುತ್ತದೆ, ನಂತರ ಅದು ಕದಂಬ ಪ್ರಾಂತಗಳಲ್ಲಿ ಸೇರಿದೆ ಎಂದು ತೋರುತ್ತದೆ. ಈ ಪ್ರದೇಶವನ್ನು ಆಳಿದ ಪ್ರಾಮುಖ್ಯತೆಯ ಮುಂದಿನ ಸಾಮ್ರಾಜ್ಯವು ಬಾದಾಮಿಯ ಚಾಲುಕ್ಯರದು. ಐಹೊಳೆಯಿಂದ ಶಾಸನವೊಂದರ ಪ್ರಕಾರ, ಪಲ್ಲವರನ್ನು ಸೋಲಿಸಿದ ಪುಲೇಕೇಶ್ -2 ಈ ಪ್ರದೇಶವನ್ನು ವಶಪಡಿಸಿಕೊಂಡು ತನ್ನ ಮಗ ಆದಿತ್ಯವರ್ಮ ಆಡಳಿತದಡಿಯಲ್ಲಿ ತನ್ನ ಸಾಮ್ರಾಜ್ಯದಲ್ಲಿ ಪ್ರಾಂತ್ಯವನ್ನು ಮಾಡಿಕೊಂಡನು. ನಂತರ ಈಗಿನ ರಾಯಚೂರು ಜಿಲ್ಲೆಯು ರಾಷ್ಟ್ರಕೂಟರ ಆಳ್ವಿಕೆಯಲ್ಲಿ ಸೇರಿಸಲ್ಪಟ್ಟಿತು, ಅವರು ಎಂಟನೇ ಶತಮಾನದಲ್ಲಿ ಅಧಿಕಾರಕ್ಕೆ ಬಂದರು, ಈ ಜಿಲ್ಲೆಯಲ್ಲಿ ಕಂಡುಬಂದ ಆ ಕಾಲದ ಶಾಸನಗಳಿಂದ ಸಂಗ್ರಹಿಸಬಹುದು. ಮಾನವಿ ತಾಲೂಕಿನ ಶಾಸನವೊಂದರ ಪ್ರಕಾರ, ರಾಷ್ಟ್ರಕೂಟ ರಾಜನ ಕೃಷ್ಣ II ನೇ ಅಧೀನದಲ್ಲಿರುವ ಒಬ್ಬ ಜಗತ್ತುಂಗ, ಅಡೆದೋರ್ ಎರಡು ಸಾವಿರ ಪ್ರಾಂತ್ಯವನ್ನು ಆಳುತ್ತಿದ್ದನು, ಅಂದರೆ, ಪ್ರಸ್ತುತ ರಾಯಚೂರು ಜಿಲ್ಲೆಯನ್ನು ರಚಿಸುವ ಪ್ರದೇಶ. ರಾಷ್ಟ್ರಕೂಟ ರಾಜನಾದ ನೃಪತುಂಗ ಅವರು ಕೊಪ್ಪಳನ್ನು ತಮ್ಮ ಕನ್ನಡ ಕೃತಿಯಾದ ಕವಿರಾಜಮಾರ್ಗದಲ್ಲಿ ದೊಡ್ಡ ಕೋಪನಗರ ಎಂದು ವರ್ಣಿಸಿದ್ದಾರೆ. ಕಲ್ಯಾಣದ ಚಾಲುಕ್ಯರ ಹಲವಾರು ಶಾಸನಗಳು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಂಡುಬರುತ್ತವೆ, ಈ ಪ್ರದೇಶವು ಕ್ರ.ಶ 10 ನೇ ಮತ್ತು 12 ನೇ ಶತಮಾನದ ನಡುವೆ ಅವರ ಹತೋಟಿಗೆ ಒಳಪಟ್ಟಿದೆ ಎಂಬ ಅಂಶಕ್ಕೆ ಸಾಕ್ಷಿಯಾಗಿದೆ. ಇದು ನೊಲಿನಲ್ಲಿರುವ ಶಾಸನದಿಂದ ಕಲಿತಿದ್ದು ಲಿಂಗಸೂಗೂರು ತಾಲ್ಲೂಕಿನಲ್ಲಿ ಚಾಲುಕ್ಯ ವಿಕ್ರಮಾದಿತ್ಯ-5 ಆಳ್ವಿಕೆಯ ಸಮಯದಲ್ಲಿ, ಅಡೆದೋರ್-ಪ್ರಾಂತ, ಅಂದರೆ, ರಾಯಚೂರು ಪ್ರದೇಶವನ್ನು ಅವನ ಕಿರಿಯ ಸಹೋದರ ಜಗದೇಕಮಲ್ಲ-1 ಆಳಿದನು. ಮಸ್ಕಿಯ ಮತ್ತೊಂದು ಶಾಸನವು ಈ ಸ್ಥಳವನ್ನು ರಾಜಧಾನಿಯಾಗಿ ವಿವರಿಸುತ್ತದೆ ಮತ್ತು ಜಯಸಿಂಹನ ಆಳ್ವಿಕೆಯನ್ನು ಉಲ್ಲೇಖಿಸುತ್ತದೆ. ಆದಾಗ್ಯೂ, ದಕ್ಷಿಣದ ಚೋಳ ರಾಜರು ಮತ್ತು ರಾಯಚೂರು ಪ್ರದೇಶದ ಮೇಲಿನ ಪ್ರಾಬಲ್ಯಕ್ಕಾಗಿ ಕಲ್ಯಾಣದ ಚಾಲುಕ್ಯರ ರಾಜರು ಮತ್ತು ಭೂಪ್ರದೇಶವು ಸ್ವಲ್ಪ ಕಾಲ ಚೋಳರ ಕೈಗೆ ಹಾದುಹೋಗಿದ್ದವು. ಹೈಹಯಾಸ್ ಮತ್ತು ಸಿಂಧಾಸ್ ಈ ಪ್ರದೇಶದ ಕೆಲವು ಭಾಗಗಳನ್ನು ಸ್ವಲ್ಪ ಕಾಲ ಆಳಿದರು ಎಂದು ತೋರುತ್ತದೆ. ನಂತರ, ಚಾಲುಕ್ಯರ ಪತನದ ನಂತರ, ರಾಯಚೂರು ಕಲಚುರಿ ರಾಜರ ಕೈಗೆ ಪ್ರವೇಶಿಸಿತು. ಆಗ 13 ನೇ ಶತಮಾನದಲ್ಲಿ ಕಾಕತೀಯರು ಬಂದರು. ರಾಯಚೂರಿನ ಕೋಟೆ-ಗೋಡೆಯ ಮೇಲೆ ಬರೆದ ಶಾಸನದಿಂದ, ಮೂಲ ಕೋಟೆಯನ್ನು ಕ್ರ.ಶ 1294 ಯಲ್ಲಿ ವಾರಂಗಲ್ನ ಕಾಕತೀಯ ರಾಣಿ ರುದ್ರಮ್ಮ ದೇವಿ ಜನರಲ್ ಗೋರ್ ಗಂಗಾಯ ರೆಡ್ಡಿ ಅವರು ನಿರ್ಮಿಸಿದರು ಎಂದು ತಿಳಿದುಬರುತ್ತದೆ. ರಾಯಚೂರು ಜಿಲ್ಲೆಯ ಇದು ಮೌರ್ಯ ರಾಜ ಅಶೋಕನ ದಿನಗಳಿಂದ ಒಂದು ಘಟನಾತ್ಮಕ ಮತ್ತು ಶ್ರೀಮಂತ ಆರಂಭವನ್ನು ಹೊಂದಿದೆ. ಹಲವಾರು ಶಾಸನಗಳು, ಬಂಡೆಗಳ ಶಾಸನಗಳು ಮತ್ತು ಇತರ ದಾಖಲೆಗಳು, ದೇವಾಲಯಗಳು, ಕೋಟೆಗಳು ಮತ್ತು ಯುದ್ಧಭೂಮಿಗಳು ಈ ಸಂಗತಿಗೆ ಸಾಕ್ಷಿಯಾಗಿದೆ. ಎರಡು ಪ್ರಮುಖ ರಾಜ್ಯಗಳ ನಡುವೆ ಸುಳ್ಳು. ಇತ್ತೀಚಿನ ದಿನಗಳಲ್ಲಿ ಇದು ಒಂದು ಭಾಗವಾಗಿತ್ತು, ಅದು ಹೈದರಾಬಾದ್ನ ರಾಜಪ್ರಭುತ್ವದ ರಾಜ್ಯವಾಗಿತ್ತು ಮತ್ತು ನವೆಂಬರ್ 1, 1956 ರಿಂದ ಇದು ಮೈಸೂರು ರಾಜ್ಯದ ಒಂದು ಜಿಲ್ಲೆಯಾಗಿದೆ. ಭೌಗೋಳಿಕ ಲಕ್ಷಣಗಳು ಜಿಲ್ಲೆಯ ದಕ್ಷಿಣದಲ್ಲಿ ತುಂಗಭದ್ರಾ ನದಿ ಹಾಗೂ ಉತ್ತರದಲ್ಲಿ ಕೃಷ್ಣಾ ನದಿಯು ಹರಿಯುತ್ತಿದ್ದು, ಬಹುತೇಕ ಬಯಲು ಪ್ರದೇಶವನ್ನು ಹೊಂದಿದೆ. ಲಿಂಗಸೂಗೂರು, ದೇವದುರ್ಗ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಚಿನ್ನದ ಅದಿರಿನ ನಿಕ್ಷೇಪಗಳಿವೆ. ರಾಯಚೂರು ಹೆಸರಿನ ಮೂಲ ಈ ಜಿಲ್ಲೆಯು ತನ್ನ ಪ್ರಧಾನ ಪಟ್ಟಣವಾದ ರಾಯಚೂರು (ಕನ್ನಡದಲ್ಲಿ ರಾಯಚೂರು ಎಂಬ ಹೆಸರಿನ ಮೂಲ) ದಿಂದ ತನ್ನ ಹೆಸರನ್ನು ಪಡೆದುಕೊಂಡಿದೆ. ರಾಜ್ಯದ ಇತರ ಜಿಲ್ಲೆಗಳೂ ಸಹ ಈ ಜಿಲ್ಲೆಯ ಹೆಸರನ್ನು ಪಡೆದುಕೊಂಡಿದೆ. ಆದರೆ, ಆಧುನಿಕ ಕಾಲದಲ್ಲಿ ರಾಯಚೂರು ಎಂಬ ಹೆಸರಿನ ಮೊದಲಿನಿಂದಲೂ ಅನೇಕ ಗ್ರಾಮಸ್ಥರು ಈ ಸ್ಥಳಕ್ಕೆ ಇನ್ನೂ ಕರೆ ನೀಡುತ್ತಿದ್ದರೂ, ಇದನ್ನು ಸಾಮಾನ್ಯವಾಗಿ ರಾಯಚೂರು ಎಂದು ಕನ್ನಡದಲ್ಲಿ ಬರೆಯಲಾಗಿದೆ ಮತ್ತು ಉಚ್ಚರಿಸಲಾಗುತ್ತದೆ. ಗಣನೀಯ ಪುರಾತನವಾದ ಈ ಸ್ಥಳದ ಹೆಸರು ಹನ್ನೆರಡನೆಯ ಶತಮಾನದಷ್ಟು ಹಿಂದೆಯೇ ಗುರುತಿಸಬಹುದಾಗಿದೆ. ಡಾ. ಪಿ.ಬಿ. ಹೊಯ್ಸಳ ರಾಜ ವಿಷ್ಣುವರ್ಧನನು ವಶಪಡಿಸಿಕೊಂಡ ಕೋಟೆಗಳಲ್ಲಿ ಒಂದಾದ ರಾಯಚೂರು ಕೋಟೆಯನ್ನು ಗಮನಿಸಿದ ದೇಸಾಯಿ. ಕನ್ನಡದಲ್ಲಿನ ಮೂರು ಹೊಯ್ಸಳ ಶಾಸನಗಳಲ್ಲಿ ಇದು. ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಹುಲೇರರಾದಲ್ಲಿ ಪತ್ತೆಯಾದ ಈ ಮೂರೂ ಶಾಸನಗಳಲ್ಲಿ (ಎಲಿಗ್ರಫಿಯಾ ಕಾರ್ನ್ಯಾಟಿಕ್, ಸಂಪುಟ V, ಪಾರ್ಟಿಐ, 1902 ರಲ್ಲಿ ಬೇಲೂರು 193 ಎಂದು ಗುರುತಿಸಲಾಗಿದೆ) ಮತ್ತು ಇದು 1161 ಕ್ರಿ.ಶ. ಮತ್ತು ಹೊಯ್ಸಳ ನರಸಿಂಹ I ಪ್ರದೇಶವನ್ನು ಒಳಗೊಂಡಿದೆ. ವಿಷ್ಣುವರ್ಧನ ಸಾಮ್ರಾಜ್ಯದ ಉತ್ತರದ ಗಡಿಯಾಗಿ ಪೆರ್ಡೋರ್ (ಕೃಷ್ಣ ನದಿ) ಮತ್ತು ರಾಚವೂರ್ ವಿಷ್ಣುವರ್ಧನರಿಂದ ಇನ್ನೂ ಒಂದು ಯುವಕನಾಗಿದ್ದ ಸ್ಥಳಗಳಲ್ಲಿ ಒಂದಾಗಿದೆ. ಪ್ರಸ್ತುತ ಮ್ಯಾಂಡೆ ಜಿಲ್ಲೆಯ ನಾಗಮಂಗದ ತಾಲ್ಲೂಕಿನ ಹಾಸ್ತಾನದಲ್ಲಿ ಪತ್ತೆಯಾಗಿರುವ ಈ ಶಾಸನಗಳಲ್ಲಿ ಎರಡನೆಯದು ಎಗ್ರಾಫಿಫಿಯಾ ಕಾರ್ನಾಟಿಕ್, ಸಂಪುಟ IV- ಭಾಗ II, 1898 ರಲ್ಲಿ ನಾಗಮಂಗಲ 70 ರ ಸಂಖ್ಯೆಯನ್ನು ಹೊಂದಿದೆ) ಮತ್ತು ಹೊಯ್ಸಳ ವೀರ-ಬಲ್ಲಾಳ II ಆಳ್ವಿಕೆಯ ಸಮಯದಲ್ಲಿ 1178 AD ಯಲ್ಲಿ ಉಲ್ಲೇಖಿಸಲಾಗಿದೆ, ಪರ್ಮಮಾನಾ (ಅಂದರೆ, ಪೆರ್ಮಾ + ನಾ) ರಾಚವೂರ್ ವಿಷ್ಣುವರ್ಧನವು ಗಂಟಿಕ್ಕಿ ಹೊಡೆದ ಹಲವಾರು ಕೋಟೆಗಳಲ್ಲಿ ಒಂದಾಗಿದೆ. ಈ ಲಿಥಿಕ್ ದಾಖಲೆ ಈ ಸ್ಥಳವನ್ನು ಪರ್ಮಾಮಾದ ರಾಚವೂರ್ ಎಂದು ಕರೆಯಲಾಗುತ್ತಿತ್ತು, ಈ ಪೆರ್ಮಾನು ಬಹುಶಃ ಸ್ಥಳೀಯ ಮುಖ್ಯಸ್ಥನಾಗಿದ್ದು, ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಿರೇಹಳ್ಳಿಯಿಂದ ಬಂದ ಈ ಶಾಸನಗಳಲ್ಲಿ ಮೂರನೆಯದು (ಎಪಿಗ್ರಫಿಯಾ ಕಾರ್ನಾಟಿಕ, ಸಂಪುಟದಲ್ಲಿ 137 ರಲ್ಲಿ ಸಂಖ್ಯೆ). ವಿ-ಭಾಗ I, 1902) ಮತ್ತು ಇದು 1183 ಎಡಿ ದಿನಾಂಕವನ್ನು ಹೊಂದಿದೆ ಮತ್ತು ಹೊಯ್ಸಲ್ಸ್ ವೀರಾ-ಬಲ್ಲಾಳ II ರ ಆಳ್ವಿಕೆಯು ರಾಚವೂರ್ ಅನ್ನು ತನ್ನ ತೋಳಿನ ಶಕ್ತಿಯಿಂದ ವಶಪಡಿಸಿಕೊಂಡ ವಿಷ್ಣುವರ್ಧನ ಸ್ಥಳಗಳಲ್ಲಿ ಒಂದಾಗಿದೆ. ಈ ಶಾಸನಗಳಲ್ಲಿ ಮತ್ತು ವಿಷ್ಣುವರ್ಧನದ ಇತರ ಶೋಷಣೆಗಳಲ್ಲಿನ ಸ್ಥಳಗಳ ಸಂಖ್ಯೆಯ ಸಂದರ್ಭದಿಂದ, ರಚವೂರ್ ಅಥವಾ ರಾಚನೂರ್ ಎಂದು ಕರೆಯಲ್ಪಡುವ ಸ್ಥಳವು ಪ್ರಸ್ತುತ ದಿನಗಳಲ್ಲಿ ರಾಯಚೂರು ಎಂದು ಸ್ಪಷ್ಟವಾಗುತ್ತದೆ. ರಾಚಾವನ್ನು ರಾಜ (ಅಂದರೆ, ರಾಜ) ನಿಂದ ಪಡೆಯಲಾಗಿದೆ ಮತ್ತು ಓರ್ ನಗರವನ್ನು ಅರ್ಥೈಸುತ್ತದೆ. ರಾಚವೂರ್ (ರಾಚಾ + ಓರ್) ಅಥವಾ ರಾಚನೂರು (ರಾಚಾ + ನಾ + ಓರ್) ಅಂದರೆ ಕನ್ನಡ ರಾಜನ ಸ್ಥಳದಲ್ಲಿ ಇದು ಈಗಾಗಲೇ ಕನ್ನಡ ದೇಶದ ಪ್ರಮುಖ ಪಟ್ಟಣ ಎಂದು ತೋರಿಸುತ್ತದೆ. 1294 ಎಡಿ., ಪೆರ್ಮಮಾನ ರಾಚವೂರ್ ಅಥವಾ ರಾಚನೂರ್ ರಚೂರ್ ಅಥವಾ ರಚೂರು ಎಂದು ಚಿಕ್ಕದಾಗಿತ್ತು. ರಾಯಚೂರ್ ಕೋಟೆಯ ಗೋಡೆಯ ಮೇಲೆ ಆ ವರ್ಷದ ಕಾಕತೀಯ ಶಾಸನದಿಂದ ಸ್ಪಷ್ಟವಾಗಿದೆ. 1541 ಎಡಿವರೆಗೂ ವಿಜಯನಗರ ಕಾಲದಲ್ಲಿ ಈ ಹೆಸರಿನ ಈ ಹೆಸರಿನ ಹೆಸರು ಆಲಂಪುರದ (ಈಗ ಆಂಧ್ರಪ್ರದೇಶದ ಮಹಾಬೂಬ್ನಗರ ಜಿಲ್ಲೆಯಲ್ಲಿ) ಕಂಡುಬರುವ ಎರಡು ಕನ್ನಡ ಶಾಸನಗಳಿಂದ ತಿಳಿದುಬಂದಿದೆ, ಇದು ರಾಜ ಕೃಷ್ಣದೇವರಾಯನು ರಚೂರ್ ಉತ್ತರದಲ್ಲಿ ಅವರ ಖರ್ಚುವಿಕೆಯಿಂದ. ಆದ್ದರಿಂದ ಈ ಐತಿಹಾಸಿಕ ರಾಚೂರ್ ಅಥವಾ ರಾಚೂರು ಇತ್ತೀಚೆಗೆ ರಾ ಮತ್ತು ಚ ನಡುವಿನ ಯಾ ಸೇರಿಸುವಿಕೆಯೊಂದಿಗೆ ಪ್ರಸ್ತುತ ರಾಯಚೂರು (ರಾ + ಯಾ + ಚಾ + ಓರ್) ಆಗಿ ಬದಲಾಗುವುದರೊಂದಿಗೆ ಇನ್ನೂ ಸ್ವಲ್ಪ ಬದಲಾವಣೆಯನ್ನು ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಇಲ್ಲಿಯೆ ಯಾದಂದರೆ ರಾಜನು ಮತ್ತೊಮ್ಮೆ ರಾಜನ ಅರ್ಥವನ್ನು ಸೂಚಿಸುವ ಎರಡನೇ ಅಕ್ಷರವಾಗಿದೆ. ರಾಯ ಮತ್ತು ರಾಯ್ ಎಂಬ ಪದಕ್ಕೆ ಸಮಾನವಾದ ಹಿಂದಿ ಮತ್ತು ಉರ್ದು ಭಾಷೆಗಳಲ್ಲಿ, ಉರ್ದುದಲ್ಲಿ ರಾಯಚೂರ್ ಎಂದು ಹೆಸರಿಸಲು ಇದು ಆಚರಣೆಯನ್ನು ತೋರುತ್ತದೆ, ನಂತರ ಆ ಬಳಕೆಯು ಇಂಗ್ಲಿಷ್ನಲ್ಲಿಯೂ ಸಹ ಬಳಕೆಯಾಗಿದೆ. ನಾಯಿಯ ಮೇಲೆ ತಿರುಗಿಸುವ ಮೊಲದ ಒಂದು ವಿಚಿತ್ರ ದೃಶ್ಯವನ್ನು ವೀಕ್ಷಿಸುವ ಮುಖ್ಯಸ್ಥನು ಅವನನ್ನು ಹಿಂಬಾಲಿಸಿದನು ಮತ್ತು ಈ ಸ್ಥಳದಲ್ಲಿ (ನಾಯಿಯನ್ನು) ತುಂಡುಗಳಾಗಿ ಹರಿದುಹಾಕಿದನು, ಈ ವೀರೋಚಿತ ಮತ್ತು ಅಸಾಮಾನ್ಯ ಕ್ರಿಯೆಯ ದೃಶ್ಯವು ನಿರ್ಮಿಸಲು ಯೋಗ್ಯ ಸ್ಥಳವಾಗಿದೆ ಎಂದು ಭಾವಿಸಲಾಗಿದೆ ಒಂದು ಕೋಟೆ ಮತ್ತು ಅದಕ್ಕನುಸಾರವಾಗಿ ಒಂದು ಅಸಾಧಾರಣ ಕೋಟೆಯನ್ನು ನಿರ್ಮಿಸಿ ಕನ್ನಡದಲ್ಲಿ Raichur ಎಂದು ಹೆಸರಿಸಲಾಯಿತು, ಇದು ನಾಯಿ, ನಾಯಿಯನ್ನು ತುಂಡುಗಳಾಗಿ ಹರಿದ ಕಲ್ಪನೆಯನ್ನು ಸೂಚಿಸುತ್ತದೆ. ಪ್ರಸ್ತುತ ಹೆಸರು, ರಾಯಚೂರು, ನೇಚೂರ್ನಿಂದ ಹುಟ್ಟಿಕೊಂಡಿದೆ ಎಂದು ಹೇಳಲಾಗುತ್ತದೆ. ಆದರೆ ಈ ರೀತಿಯ ಕಥೆಯು ಅನೇಕ ಕೋಟೆಗಳನ್ನು ಗೌರವಿಸುತ್ತದೆ. ತೆಲುಗು ಭಾಷೆಯಲ್ಲಿ ರಾಯ್ ಅರ್ಥ ಕಲ್ಲು ಎಂದು ಹೇಳಲಾಗುತ್ತದೆ, ಒರು (ಪಟ್ಟಣ) ಜೊತೆಗೆ, ರಾಜುರು, ಅಂದರೆ, ಕಲ್ಲುಗಳ ಪಟ್ಟಣ (ಸುತ್ತಮುತ್ತಲ ಬಂಡೆಗಳ ಕಾರಣದಿಂದಾಗಿ) ರಾಯಚೂರು ಅಥವಾ ರಾಯ್ಚೂರ್ ಆಗುತ್ತದೆ. ಈ ಮತ್ತು ಇನ್ನಿತರ ಕಥೆಗಳು ಈಗಾಗಲೇ ವಿವರಿಸಿದ ಹೆಸರಿನ ಬಗ್ಗೆ ಸ್ಪಷ್ಟವಾದ ಐತಿಹಾಸಿಕ ಪುರಾವೆಗಳ ದೃಷ್ಟಿಯಿಂದ ಕೇವಲ ಊಹೆಗಳನ್ನು ಮಾತ್ರ ಹೇಳಬಹುದು. ರಾಯಚೂರ್ ಅನ್ನು ಒಮ್ಮೆ ಒಂದು ಬಹಮನಿ ಸುಲ್ತಾನರಿಂದ ಫಿರೋಜೆಂಜರ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಕಾಣುತ್ತದೆ, ಆದರೆ ಈ ಮೇಲ್ಮನವಿಯು ಅದರ ಮೇಲೆ ಅಂಟಿಕೊಳ್ಳುವುದಿಲ್ಲ ಮತ್ತು ಹಳೆಯ ಹೆಸರಿನಿಂದ ಮಾತ್ರ ಇದನ್ನು ಮುಂದುವರೆಸಿತು. ತಾಲೂಕುಗಳು 1 ರಾಯಚೂರು 2 ದೇವದುರ್ಗ 3 ಲಿಂಗಸಗೂರ 4 ಮಾನ್ವಿ 5 ಸಿಂಧನೂರ 6 ಮಸ್ಕಿ 7 ಸಿರವಾರ ಕೊರತೆಗಳು ಮಳೆಯ ಕೊರತೆ, ನೀರಿನ ಅಭಾವ ಜಿಲ್ಲೆಯ ಸಾಮಾನ್ಯ ಸಮಸ್ಯೆಗಳಾದರೆ, ಅತಿಯಾದ ಬಿಸಿಲು ಜಿಲ್ಲೆಯ ಮತ್ತೊಂದು ಲಕ್ಷಣ. ಹವಾಗುಣ ಜಿಲ್ಲೆಯ ಹವಾಗುಣವು ಬಹುತೇಕ ಒಣ ಹವೆ ಇರುತ್ತದೆ. ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ ೪೫ ಡಿಗ್ರಿವರೆಗೆ ಉಷ್ಣತೆ ಇರುತ್ತದೆ. ಜಿಲ್ಲೆಯ ಪ್ರಮುಖರು ವಿಜಯದಾಸರು, ಹರಿದಾಸರು ಗೋಪಾಲದಾಸರು, ಹರಿದಾಸರು (ಮಸರಕಲ್ ಗ್ರಾಮ ,ದೇವದುರ್ಗ ) ಚನ್ನಬಸವಪ್ಪ ಬೆಟ್ಟದೂರು, ಹಿರಿಯ ಸ್ವಾತಂತ್ರ ಹೋರಾಟಗಾರರು, ರೈತ ಹೋರಾಟಗಾರರು, ವಿಚಾರವಾದಿಗಳು ಶಂಕರಗೌಡ ಬೆಟ್ಟದೂರು, ಹಿರಿಯ ಸ್ವಾತಂತ್ರ ಹೋರಾಟಗಾರರು, ಚಿತ್ರ ಕಲಾವಿದರು ಶಿವರಾಜ ಪಾಟೀಲ್ , ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರು ಪ್ರಾಮುಖ್ಯತೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ಇರುವ ಶಾಖೋತ್ಪನ್ನ ವಿದ್ಯುತ್‌ಸ್ಥಾವರ ಕರ್ನಾಟಕದಲ್ಲಿ ಬಳಸಲ್ಪಡುವ ವಿದ್ಯುಚ್ಛಕ್ತಿಯ ಪ್ರಮುಖ ಕೇಂದ್ರಗಳಲ್ಲಿ ಒಂದಾಗಿದೆ. ಜಿಲ್ಲೆಯ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಪ್ರಮುಖವಾಗಿದೆ. ಲಿಂಗಸೂಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿಯು ದೇಶದಲ್ಲಿಯೇ ಅತಿ ಹೆಚ್ಚು ಚಿನ್ನದ ಅದಿರು ಹೊಂದಿರುವ ಗಣಿಯಾಗಿದೆ. ಅಶೋಕನ ಕಾಲದ ಮಸ್ಕಿ ಶಾಸನ ದೊರೆತಿರುವುದು ಇದೇ ತಾಲೂಕಿನ ಮಸ್ಕಿಯಲ್ಲಿದೆ. ಇದೇ ಶಾಸನದಲ್ಲಿ ದೇವನಾಂಪ್ರಿಯಸ ಅಸೋಕಸ ಎನ್ನುವ ಪ್ರಸಿದ್ಡ ಸಾಲಿದೆ. ಸಿಂಧನೂರು ರಾಜ್ಯದಲ್ಲಿಯೇ ಅತಿ ಹೆಚ್ಚು ಪ್ರಮಾಣದಲ್ಲಿ ಭತ್ತ ಬೆಳೆಯುವ ಪ್ರದೇಶವಾಗಿದೆ. ಸಿಂಧನೂರು ತಾಲ್ಲೂಕಿನ ಸೋಮಲಾಪುರ ಗ್ರಾಮದ ಅಂಭಾಮಠದ ಅಂಭಾದೇವಿಯ ಜಾತ್ರೆ ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದೆ. ಲಿಂಗಸೂಗೂರು ತಾಲ್ಲೂಕಿನ ಮುದುಗಲ್ ನಲ್ಲಿ ಐತಿಹಾಸಿಕ ಕೋಟೆ ಇದ್ದು, ಮೊಹರಂ ಆಚರಣೆ ವಿಜೃಂಭಣೆಯಿಂದ ಜರಗುತ್ತದೆ. ಜಲದುರ್ಗದಲ್ಲಿರುವ ಕೋಟೆ, ಅತ್ಯಂತ ವಿಶೇಷವಾಗಿ ನಿರ್ಮಿಸಲಾದ ಕೋಟೆಗಳಲ್ಲಿ ಒಂದಾಗಿದೆ.ಜೊತೆಗೆ ಇಲ್ಲಿ ಕಂಡು ಬರುವ ರಕ್ಷಣಾ ವಾಸ್ತುಶಿಲ್ಪ ತುಂಬಾ ವಿಶೇಷ ವಾದದ್ದು. ಮಂತ್ರಾಲಯವು ರಾಯಚೂರಿನಿಂದ ಹತ್ತಿರದಲ್ಲಿದೆ. ಮಾನವಿ ಕೊನೆಯ ತಾಲೂಕು. ಈ ಮಾನವಿಯಲ್ಲಿ ದಾಸ ಸಾಹಿತ್ಯ ಉಗಮವಾಗಿದ್ದು. ವಿಜಯ ದಾಸರು ಮಾನವಿ ತಾಲೂಕಿನವರು. ದೇವದುರ್ಗ ತಾಲೂಕಿನಲ್ಲಿ ಮುಂಡರಗಿಯಲ್ಲಿರು ಶಿವ ದೇವಾಲಯು ಅತ್ಯಂತ ಪ್ರಾಚೀನ ದೇವಾಲಯವಾಗಿದೆ,ಮತ್ತು ಜಾಲಹಳ್ಳಿ ರಂಗನಾಥ ದೇವಾಲಯು ಸುಪ್ರಸಿದ್ಧ ದೇವಾಲಯ ವಾಗಿದೆ. ಇದನ್ನೂ ನೋಡಿ ರಾಯಚೂರು (ಲೋಕ ಸಭೆ ಚುನಾವಣಾ ಕ್ಷೇತ್ರ) ಬಾಹ್ಯ ಅಂತರ್ಜಾಲ ಸಂಪರ್ಕಗಳು ರಾಯಚೂರು ಜಿಲ್ಲೆಯ ಅಧಿಕೃತ ತಾಣ ರಾಯಚೂರು ನಗರದ ಅಧಿಕೃತ ತಾಣ ರಾಯಚೂರು ಜಿಲ್ಲೆಯ ನಕ್ಷೆ ಕರ್ನಾಟಕದ ಜಿಲ್ಲೆಗಳು ಕರ್ನಾಟಕದ ಪ್ರಮುಖ ಸ್ಥಳಗಳು ರಾಯಚೂರು ಜಿಲ್ಲೆ ರಾಯಚೂರು ಜಿಲ್ಲೆಯ ತಾಲೂಕುಗಳು ಕರ್ನಾಟಕದ ತಾಲೂಕುಗಳು
1039
https://kn.wikipedia.org/wiki/%E0%B2%AC%E0%B2%B3%E0%B3%8D%E0%B2%B3%E0%B2%BE%E0%B2%B0%E0%B2%BF
ಬಳ್ಳಾರಿ
ವಿಜಯನಗರದ ಕರ್ನಾಟಕ ರಾಜ್ಯದ ಒಂದು ಪ್ರಮುಖ ಜಿಲ್ಲೆ; ಇದೇ ಹೆಸರಿನ ನಗರ ಜಿಲ್ಲೆಯ ರಾಜಧಾನಿ. ಇಲ್ಲಿನ ಪ್ರಸಿದ್ಧ ಸ್ಥಳಗ ಳಲ್ಲಿ ಹಂಪೆ ಮತ್ತು ಅಲ್ಲಿರುವ ವಿಜಯನಗರ ಸಾಮ್ರಾಜ್ಯದ ಅವಶೇಷಗಳು ಮುಖ್ಯವಾದವು. ಬಳ್ಳಾರಿ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಎಂದರೆ ಹೊಸಪೇಟೆ - ಇಲ್ಲಿರುವ ತುಂಗಭದ್ರಾ ಅಣೆಕಟ್ಟು ಕೃಷಿಗೆ ನೀರನ್ನು ಒದಗಿಸುತ್ತದೆ.ಬಳ್ಳಾರಿ ಜಿಲ್ಲೆಯು 1956 ಕ್ಕಿಂತ ಮುಂಚೆ ಮದ್ರಾಸ್ ಪ್ರಾಂತ್ಯದಲ್ಲಿತ್ತು ಜಿಂದಾಲ್ ಕಂಪನಿ ಸಹಾಭಾಗೀತ್ವದಲ್ಲಿ ಬಳ್ಳಾರಿಯು 1932 ರಲ್ಲಿ ಪ್ರಪ್ರಥಮ ಭಾರಿ ವಿಮಾನ ಸಂಪರ್ಕ ಪಡೆದ ಸ್ಥಳವಾಗಿದೆ.ಶಾಸನಗಳ ಪಿತಾಮಹ ಎಂದು ಕರೆಯಲಾದ ಅಶೋಕನ 9 ಶಾಸನಗಳು ಕಂಡು ಬಂದಿವೆ. ಕರ್ನಾಟಕದಲ್ಲಿ ಒಟ್ಟು 17 ಕಡೆ ಅಶೋಕನ ಶಾಸನಗಳು ಕಂಡುಬಂದಿವೆ. ಬಳ್ಳಾರಿಯಲ್ಲಿ ಅಶೋಕನ ಎರಡು ಶಾಸನಗಳು ಕಂಡುಬದಿವೆ ಅವು ಯಾವುವೆಂದರೆ: 1)ಉದಯಗೋಳ 2)ನಿಟ್ಟೂರು ನಲ್ಲಿ ಕಂಡುಬದಿವೆ. ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧವಾಗಿದೆ. ಇಲ್ಲಿ ಪ್ರತೀ ವರ್ಷ ಪಾಲ್ಗುಣ ಶುಕ್ಲದ ದಶಮಿಯಂದು ರಥೋತ್ಸವ ಇರುತ್ತದೆ ಹಾಗೂ ಸಂಡೂರು ತಾಲೂಕಿನ ಸೋವೇನಹಳ್ಳಿಯಲ್ಲಿ ಸಾರಿದುರ್ಗಾಂಭ ಹಾಗೂ ಶ್ರೀ ಸಿದ್ದಲಿಂಗೇಶ್ವರ ರಥೋತ್ಸವಗಳು ವೈಭವದಿಂದ ಜರುಗುತ್ತವೆ. ಚರಿತ್ರೆ ಚಾರಿತ್ರಿಕವಾಗಿ, ಬಳ್ಳಾರಿ ಜಿಲ್ಲೆಗೆ ಪ್ರಾಮುಖ್ಯತೆಗೆ ಬಂದದ್ದು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ. ಇದಕ್ಕೆ ಮೊದಲು ಈ ಪ್ರದೇಶ ಶಾತವಾಹನ, ಕಲ್ಯಾಣಿ ಚಾಲುಕ್ಯರು, ಕದಂಬರು, ಸೇವುಣರು ಮತ್ತು ಹೊಯ್ಸಳರ ನಿಯಂತ್ರಣದಲ್ಲಿತ್ತು. ವಿಜಯನಗರ ಸಾಮ್ರಾಜ್ಯ ಬಳ್ಳಾರಿ ಜಿಲ್ಲೆಯಲ್ಲೇ ರಾಜಧಾನಿಯನ್ನು ಹೊಂದಿದ್ದರಿಂದ ಆ ಸಮಯದಲ್ಲಿ ಈ ಜಿಲ್ಲೆ ಪ್ರಾಮುಖ್ಯತೆಗೆ ಬಂದಿತು. ಬ್ರಿಟಿಷ್ ಆಡಳಿತದ ಕಾಲದಲ್ಲಿ ಮದರಾಸು ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿ ಜಿಲ್ಲೆ ೧೯೫೩ ರಲ್ಲಿ ಮೈಸೂರು ರಾಜ್ಯಕ್ಕೆ ವರ್ಗಾಯಿಸಲ್ಪಟ್ಟಿತು. ಭೌಗೋಳಿಕತೆ ಕರ್ನಾಟಕದ ಪೂರ್ವದ ಗಡಿಯಲ್ಲಿರುವ ಬಳ್ಳಾರಿ ಜಿಲ್ಲೆಯ ಉತ್ತರಕ್ಕೆ ರಾಯಚೂರು ಮತ್ತು ಕೊಪ್ಪಳ, ಪಶ್ಚಿಮಕ್ಕೆ ಹಾವೇರಿ ಮತ್ತು ಗದಗ್, ದಕ್ಷಿಣಕ್ಕೆ ದಾವಣಗೆರೆ ಮತ್ತು ಚಿತ್ರದುರ್ಗ ಮತ್ತು ಪೂರ್ವಕ್ಕೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕರ್ನೂಲು ಜಿಲ್ಲೆಗಳಿವೆ. ಈ ಜಿಲ್ಲೆಯ ವಿಸ್ತೀರ್ಣ ೮೪೪೭ ಚ.ಕಿಮೀ ಮತ್ತು ವಾರ್ಷಿಕ ಮಳೆ ೬೩.೯ ಸೆಮೀ. ಬಳ್ಳಾರಿ ಜಿಲ್ಲೆಯಲ್ಲಿ ಕಬ್ಬಿಣ, ಮ್ಯಾಂಗನೀಸ್, ತಾಮ್ರ ಮತ್ತು ಸೀಸದ ಗಣಿಗಳು ಸಾಕಷ್ಟಿವೆ. ಆಕರ್ಷಣೀಯ ಸ್ಥಳಗಳು ಬಳ್ಳಾರಿಯು ಗಣಿನಾಡು ಎಂದೇ ಪ್ರಸಿದ್ಧಿ 1.ಬಳ್ಳಾರಿ: ಬಳ್ಳಾರಿ ಕೋಟೆ, ಬಳ್ಳಾರಿಯ ಕನಕದುರ್ಗಮ್ಮ ಗುಡಿ, ಮಹದೇವತಾತನವರ ಮಠ 2. ಸಂಡೂರು: ಕುಮಾರಸ್ವಾಮಿ ದೇವಸ್ಥಾನ, ನಾರಿಹಳ್ಳ, ಗಣಿಗಾರಿಕೆ 3. ಕುರುಗೋಡು: ದೊಡ್ಡಬಸವೇಶ್ವರ ದೇವಸ್ಥಾನ ತಾಲ್ಲೂಕುಗಳು: ಬಳ್ಳಾರಿ, ಕಂಪ್ಲಿ, ಸಂಡೂರು, ಸಿರುಗುಪ್ಪ, ಕುರುಗೋಡು ಆಕರ್ಷಣೆಗಳು ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಸ್ಥಳಗಳಲ್ಲಿ ಹಂಪೆ ಸಿಂಧಿಗೇರಿ ಮತ್ತು ಅಲ್ಲಿರುವ ವಿಜಯನಗರ ಸಾಮ್ರಾಜ್ಯದ ಅವಶೇಷಗಳು ಮುಖ್ಯವಾದವು. ಬಳ್ಳಾರಿ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಎಂದರೆ ಹೊಸಪೇಟೆ - ಇಲ್ಲಿರುವ ತುಂಗಭದ್ರಾ ಅಣೆಕಟ್ಟು ಕೃಷಿಗೆ ನೀರನ್ನು ಒದಗಿಸುತ್ತದೆ. ಬೊಮ್ಮಘಟ್ಟ ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧವಾಗಿದೆ. ಇಲ್ಲಿ ಪ್ರತೀ ವರ್ಷ ಪಾಲ್ಗುಣ ಶುಕ್ಲದ ದಶಮಿಯಂದು ರಥೋತ್ಸವ ಇರುತ್ತದೆ ಹಾಗೂ ಸಂಡೂರು ತಾಲೂಕಿನ ಸೋವೇನಹಳ್ಳಿಯಲ್ಲಿ ಸಾರಿದುರ್ಗಾಂಭ ಹಾಗೂ ಶ್ರೀ ಸಿದ್ದಲಿಂಗೇಶ್ವರ ರಥೋತ್ಸವಗಳು ವೈಭವದಿಂದ ಜರುಗುತ್ತವೆ. ಚರಿತ್ರೆ ಚಾರಿತ್ರಿಕವಾಗಿ, ಬಳ್ಳಾರಿ ಜಿಲ್ಲೆಗೆ ಪ್ರಾಮುಖ್ಯತೆಗೆ ಬಂದದ್ದು ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ. ಇದಕ್ಕೆ ಮೊದಲು ಈ ಪ್ರದೇಶ ಶಾತವಾಹನ, ಕಲ್ಯಾಣಿ ಚಾಲುಕ್ಯರು, ಕದಂಬರು, ಸೇವುಣರು ಮತ್ತು ಹೊಯ್ಸಳರ ನಿಯಂತ್ರಣದಲ್ಲಿತ್ತು. ವಿಜಯನಗರ ಸಾಮ್ರಾಜ್ಯ ಬಳ್ಳಾರಿ ಜಿಲ್ಲೆಯಲ್ಲೇ ರಾಜಧಾನಿಯನ್ನು ಹೊಂದಿದ್ದರಿಂದ ಆ ಸಮಯದಲ್ಲಿ ಈ ಜಿಲ್ಲೆ ಪ್ರಾಮುಖ್ಯತೆಗೆ ಬಂದಿತು. ಬ್ರಿಟಿಷ್ ಆಡಳಿತದ ಕಾಲದಲ್ಲಿ ಮದರಾಸು ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿ ಜಿಲ್ಲೆ ೧೯೫೩ ರಲ್ಲಿ ಮೈಸೂರು ರಾಜ್ಯಕ್ಕೆ ವರ್ಗಾಯಿಸಲ್ಪಟ್ಟಿತು. ಭೌಗೋಳಿಕತೆ ಕರ್ನಾಟಕದ ಪೂರ್ವದ ಗಡಿಯಲ್ಲಿರುವ ಬಳ್ಳಾರಿ ಜಿಲ್ಲೆಯ ಉತ್ತರಕ್ಕೆ ರಾಯಚೂರು ಮತ್ತು ಕೊಪ್ಪಳ, ಪಶ್ಚಿಮಕ್ಕೆ ಹಾವೇರಿ ಮತ್ತು ಗದಗ್, ದಕ್ಷಿಣಕ್ಕೆ ದಾವಣಗೆರೆ ಮತ್ತು ಚಿತ್ರದುರ್ಗ ಮತ್ತು ಪೂರ್ವಕ್ಕೆ ಆಂಧ್ರ ಪ್ರದೇಶದ ಅನಂತಪುರ ಹಾಗೂ ಕರ್ನೂಲು ಜಿಲ್ಲೆಗಳಿವೆ. ಈ ಜಿಲ್ಲೆಯ ವಿಸ್ತೀರ್ಣ ೮೪೪೭ ಚ.ಕಿಮೀ ಮತ್ತು ವಾರ್ಷಿಕ ಮಳೆ ೬೩.೯ ಸೆಮೀ. ಬಳ್ಳಾರಿ ಜಿಲ್ಲೆಯಲ್ಲಿ ಕಬ್ಬಿಣ, ಮ್ಯಾಂಗನೀಸ್, ತಾಮ್ರ ಮತ್ತು ಸೀಸದ ಗಣಿಗಳು ಸಾಕಷ್ಟಿವೆ. ತಾಲೂಕುಗಳು ಬಳ್ಳಾರಿ ಹೂವಿನ ಹಡಗಲಿ ಹಗರಿಬೊಮ್ಮನಹಳ್ಳಿ ಕೂಡ್ಲಿಗಿ ಶಿರಗುಪ್ಪ ಹೊಸಪೇಟೆ ಸಂಡೂರು ಕೊಟ್ಟೂರು ಕಂಪ್ಲಿ ಕುರಗೋಡ ಹರಪ್ಪನಹಳ್ಳಿ ಅಕ್ಟೋಬರ್ 2, 2021 ರಿಂದ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆಯನ್ನು ಕೇಂದ್ರವಾಗಿಟ್ಟುಕೊಂಡು ವಿಜಯ ನಗರ ಪ್ರತ್ಯೇಕ ಜಿಲ್ಲೆಯನ್ನು ರಚಿಸಲಾಗಿದೆ. ಆದ್ದರಿಂದ ಬಳ್ಳಾರಿ ಜಿಲ್ಲೆಯಲ್ಲಿ ಈಗ ಕೇವಲ ಐದು ತಾಲೂಕುಗಳಿವೆ. ಅವೆಂದರೆ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಿರಗುಪ್ಪ ಮತ್ತು ಸಂಡೂರು. ಕೃಷಿ ಕೃಷಿ ಬಳ್ಳಾರಿ ಜಿಲ್ಲೆಯ ಮುಖ್ಯ ವೃತ್ತಿ. ಕೃಷಿಗೆ ನೀರಿನ ಸರಬರಾಜು ತುಂಗಭದ್ರಾ ನದಿ ಮತ್ತು ಹೊಸಪೇಟೆಯಲ್ಲಿನ ತುಂಗಭದ್ರಾ ಅಣೆಕಟ್ಟಿನಿಂದ ಆಗುತ್ತದೆ. ಇಲ್ಲಿ ಬೆಳೆಯಲ್ಪಡುವ ಮುಖ್ಯ ಬೆಳೆಗಳು ಹತ್ತಿ, ಜೋಳ, ನೆಲಗಡಲೆ, ಭತ್ತ, ಸೂರ್ಯಕಾಂತಿ. ಇದನ್ನೂ ನೋಡಿ ಬಳ್ಳಾರಿ (ಲೋಕ ಸಭೆ ಚುನಾವಣಾ ಕ್ಷೇತ್ರ) ಶೇಖರ್‌ ಗುಪ್ತ;‘ಬಳ್ಳಾರಿ ರಿಪಬ್ಲಿಕ್‌’ ಉದಯದ ನಿರೀಕ್ಷೆಯಲ್ಲಿ...;13 May, 2018 ಭೂಗೋಳ ಕರ್ನಾಟಕದ ಜಿಲ್ಲೆಗಳು
1040
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B2%A6%20%E0%B2%B5%E0%B2%BF%E0%B2%9C%E0%B3%8D%E0%B2%9E%E0%B2%BE%E0%B2%A8%E0%B2%BF%E0%B2%97%E0%B2%B3%E0%B3%81
ಭಾರತದ ವಿಜ್ಞಾನಿಗಳು
ಡಾ. ಸಿ. ವಿ. ರಾಮನ್ (ಸರ್ ಸಿ.ವಿ. ರಾಮನ್) (ನೋಬೆಲ್ ಪ್ರಶಸ್ತಿ ವಿಜೇತರು) ಡಾ. ಜಗದೀಶ್ಚಂದ್ರ ಬೋಸ್ (ಸರ್ ಜೆ. ಸಿ. ಬೋಸ್) ಸತ್ಯೇಂದ್ರನಾಥ ಬೋಸ್ ಮೇಘನಾದ ಸಾಹ ಜೆ. ಬಿ. ಎಸ್. ಹಾಲ್ಡೇನ್ (ಹುಟ್ಟಿನಿಂದ ಅಂಗ್ಲೇಯರಾದರೂ ನಂತರ ಭಾರತದಲ್ಲಿ ನೆಲಸಿ ಭಾರತದ ಪೌರರಾದವರು) ಶ್ರೀನಿವಾಸ ರಾಮಾನುಜನ್ ಹೋಮಿ ಜಹಂಗೀರ್ ಭಾಬ ವಿಕ್ರಮ್ ಸಾರಾಭಾಯಿ ಹರಗೋಬಿಂದ ಖುರಾನ (ನೋಬೆಲ್ ಪ್ರಶಸ್ತಿ ವಿಜೇತರು) ಸುಬ್ರಮಣ್ಯಮ್ ಚಂದ್ರಶೇಖರ್ (ನೋಬೆಲ್ ಪ್ರಶಸ್ತಿ ವಿಜೇತರು) ಯು. ಆರ್. ರಾವ್ ಡಾ. ರಾಜಾರಾಮಣ್ಣ ವಿಜ್ಞಾನ ಭಾರತದ ವಿಜ್ಞಾನಿಗಳು
1041
https://kn.wikipedia.org/wiki/%E0%B2%9A%E0%B2%82%E0%B2%A6%E0%B3%8D%E0%B2%B0%E0%B2%B6%E0%B3%87%E0%B2%96%E0%B2%B0%20%E0%B2%B5%E0%B3%86%E0%B2%82%E0%B2%95%E0%B2%9F%E0%B2%B0%E0%B2%BE%E0%B2%AE%E0%B2%A8%E0%B3%8D
ಚಂದ್ರಶೇಖರ ವೆಂಕಟರಾಮನ್
ಸರ್ ಸಿ.ವಿ.ರಾಮನ್ (Sir C.V.Raman) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ. ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು. ಬಾಲ್ಯ, ವಿದ್ಯಾಭ್ಯಾಸ, ವೃತ್ತಿ ಚಂದ್ರಶೇಖರ ವೆಂಕಟಾರಾಮನ್, ನವೆಂಬರ್ ೭, ೧೮೮೮ ರಲ್ಲಿ ತಮಿಳುನಾಡುನ ತಿರುಚಿನಾಪಳ್ಳಿ ಜಿಲ್ಲೆಯ 'ತಿರುವನೈಕಾವಲ್' ಎಂಬಲ್ಲಿ ಜನಿಸಿದರು. ಅವರ ತಂದೆ, ಚಂದ್ರಶೇಖರ್ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದರು. ತಾಯಿಯವರ ಹೆಸರು, ಪಾರ್ವತಿ ಅಮ್ಮಾಳ್. ಆದರೆ ಕುಟುಂಬ ದೊಡ್ಡದಾಗಿದ್ದರಿಂದ ಬಡತನದ ಸ್ಥಿತಿಯಲ್ಲಿದ್ದರು. ರಾಮನ್ ಗೆ ಸಾಕಷ್ಟು ಶೈಕ್ಷಣಿಕ ಸೌಕರ್ಯಗಳನ್ನು ಒದಗಿಸುವ ಅನುಕೂಲ ಅವರಿಗಿರಲಿಲ್ಲ. ಇವರ ಎಳೆತನದ ವಿದ್ಯಾಭ್ಯಾಸ ವಿಶಾಖಪಟ್ಟಣದಲ್ಲಿ ಆಯಿತು. ಮೇಧಾವಿಯಾಗಿದ್ದ ರಾಮನ್ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದಲ್ಲಿ ಮಾಡಿದ ಸಾಧನೆ ಅಪಾರವಾಗಿತ್ತು. ೧೯೦೦: ತಮ್ಮ ೧೨ ನೆ ವಯಸ್ಸಿನಲ್ಲೇ ಮೆಟ್ರಿಕ್ಯುಲೆಶನ್ ಮುಗಿಸಿದರು. ೧೯೦೪: ಮದ್ರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಎ. ಪದವಿ ೧೯೦೭: ಭೌತವಿಜ್ಞಾನದಲ್ಲಿ ಎಂ. ಎ. ಪದವಿ ೧೯೦೭ರಲ್ಲಿ ಭಾರತೀಯ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಲ್ಕತ್ತೆಯಲ್ಲಿ, ಭಾರತ ಸರ್ಕಾರದ ವಿತ್ತ ವಿಭಾಗದಲ್ಲಿ ಡೆಪ್ಯುಟಿ ಅಕೌಂಟೆಂಟ್ ಜನರಲ್ ಆಗಿ ವೃತ್ತಿ-ಜೀವನ ಆರಂಭಿಸಿದರು. ವಿದ್ಯಾರ್ಥಿಯಾಗಿದ್ದಾಗ ವೈಜ್ಞಾನಿಕ ಪ್ರಯೋಗಗಳಲ್ಲಿ ತೋರುತ್ತಿದ್ದ ಆಸಕ್ತಿಯನ್ನು ಅವರು ವೃತ್ತಿನಿರತರಾಗಿದ್ದಾಗಲೂ ಮುಂದುವರಿಸಿದರು. ಇವರನ್ನು ಸರ್ಕಾರಿ ಕೆಲಸದ ನಿಮಿತ್ತ ಬರ್ಮದ ರಂಗೂನಿಗೆ ಕಳುಹಿಸಿಕೊಡಲಾಯಿತು. ನಾಗಪುರದಲ್ಲೂ ಕೆಲಕಾಲ ಸೇವೆ ಸಲ್ಲಿಸಿದರು. ಆದರೆ ಇವರ ಒಲವೆಲ್ಲ ವಿಜ್ಞಾನದ ಕಡೆಗೇ ಇದ್ದುದರಿಂದ ಕಲ್ಕತ್ತದಲ್ಲಿನ ದಿ ಇಂಡಿಯನ್ ಅಸೋಸಿಯೇಷನ್ ಫಾರ್ ದ ಕಲ್ಟಿವೇಶನ್ ಆಫ್ ಸೈನ್ಸ್ ಎಂಬ ಖಾಸಗಿ ವಿಜ್ಞಾನ ಸಂಶೋಧನೆ ಮಂದಿರದಲ್ಲಿ ಸಂಶೋಧನೆಯಲ್ಲಿ ತೊಡಗಿದರು. ಇಲ್ಲಿದ್ದಾಗ ಮೇಲ್ಮೈಕರ್ಷಣ (ಸರ್ಫೇಸ್ ಟೆನ್ಷನ್) ಮತ್ತು ಬೆಳಕಿನ ಸಂಚರಣೆಯನ್ನು (ಪ್ರಾಪಗೇಷನ್ ಆಫ್ ಲೈಟ್) ಕುರಿತಂತೆ ಕೆಲಸ ಮಾಡಿದರು. ಉದ್ಯೋಗ ನಿಮಿತ್ತ ಕಲ್ಕತ್ತದಿಂದ ಹೊರಗಿನ ಊರುಗಳಿಗೆ ಹೋಗಿದ್ದ ರಾಮನ್ ಅವರು 1911ರಲ್ಲಿ ಪುನಃ ಕಲ್ಕತ್ತೆಗೆ ಮರಳಿದರು. ಕಲ್ಕತ್ತ ವಿಶ್ವವಿದ್ಯಾಲಯದ ಕುಲಪತಿ ಅಶುತೋಷ ಮುಖರ್ಜಿಯವರ ಆಮಂತ್ರಣದ ಮೇರೆಗೆ 1917ರಲ್ಲಿ ಇವರು ತಮ್ಮ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ, ಆ ವಿಶ್ವವಿದ್ಯಾಲಯದ ಪಲಿತ್ ಭೌತವಿಜ್ಞಾನ ಪೀಠದ ಪ್ರಾಧ್ಯಾಪಕರಾಗಿ ಸೇರಿದರು. ಇದಕ್ಕೆ ಇವರ ಧರ್ಮಪತ್ನಿ ಲೋಕಸುಂದರಿ ರಾಮನ್ ಅವರ ಪ್ರೋತ್ಸಾಹವೂ ದೊರಕಿತ್ತು. ಸದಾ ಕುತೂಹಲಿ, ಪ್ರಯೋಗಪಟು ಮತ್ತು ಚಿಂತನಶೀಲರಾಗಿದ್ದ ರಾಮನ್ 1917ರಿಂದ ಮುಂದೆ ಮೂಲಭೂತ ಸಂಶೋಧನೆಗಳನ್ನು ಮಾಡಲು ಉದ್ಯುಕ್ತರಾದರು. ಬೆಳಕಿನ ಬಗ್ಗೆ ಹೆಚ್ಚಿನ ಬೆಳಕನ್ನು ಚೆಲ್ಲುವುದು ಇವರ ಆಗಿನ ಆಸಕ್ತ ಕ್ಷೇತ್ರ. ೧೯೨೧ರಲ್ಲಿ ಕಲ್ಕತ್ತ ವಿಶ್ವವಿದ್ಯಾಲಯ ಇವರಿಗೆ ಡಾಕ್ಟೊರೇಟ್ ಪದವಿ ನೀಡಿ ಗೌರವಿಸಿತು. ೧೯೨೪ರಲ್ಲಿ 'ಲಂಡನಿನ ಫೆಲೊ ಆಫ್ ರಾಯಲ್ ಸೊಸೈಟಿ'ಗೆ ರಾಮನ್ ಆಯ್ಕೆಯಾದರು ಮಾರ್ಚ್ ೧೬ ೧೯೨೮ರಲ್ಲಿ ತಮ್ಮ ಶೋಧನೆ, 'ರಾಮನ್ ಎಫೆಕ್ಟ್'ನ್ನು 'ಬೆಂಗಳೂರಿ'ನಲ್ಲಿ ಬಹಿರಂಗ ಪಡಿಸಿದ ರಾಮನ್, ೧೯೩೦ರಲ್ಲಿ ಅದಕ್ಕಾಗಿ 'ನೋಬೆಲ್ ಪ್ರಶಸ್ತಿ'ಗಳಿಸಿದರು. ಮದುವೆ ಡಾ. ರಾಮನ್, ೬, ಮೇ, ೧೯೦೭ ರಲ್ಲಿ ಲೋಕಸುಂದರಿ ಅಮ್ಮಾಳ್ ಎಂಬ ಹುಡುಗಿಯೊಂದಿಗೆ ವಿವಾಹವಾದರು (೧೮೯೨–೧೯೮೦). 'ರಾಮನ್', 'ಲೋಕಸುಂದರಿ ಅಮ್ಮಾಳ್' ದಂಪತಿಗಳಿಗೆ ಚಂದ್ರಶೇಖರ್, ಮತ್ತು ರಾಧಾಕೃಷ್ಣನ್, ಎಂಬ ಇಬ್ಬರು ಗಂಡುಮಕ್ಕಳಿದ್ದಾರೆ. ರಾಮನ್ ಪರಿಣಾಮ ಈ ತತ್ತ್ವವು ವಿಜ್ಞಾನಕ್ಕೆ ಸರ್ ಸಿ.ವಿ. ರಾಮನ್ ರ ಒಂದು ದೊಡ್ಡ ಕೊಡುಗೆಯಾಗಿದೆ. ಆಕಾಶದ ನೀಲಿ ಬಣ್ಣ ಅವರನ್ನು ಸ್ಥಬ್ಧರನ್ನಾಗಿ ಮಾಡಿತ್ತು. ಅದು ಹೇಗೆ ಸಾಧ್ಯ ಎಂಬ ಪ್ರಶ್ನೆ ರಾಮನ್ ರನ್ನು ಮೊದಲಿನಿಂದಲೂ ಕಾಡುತ್ತಿತ್ತು. ಅದಕ್ಕೆ ಉತ್ತರ ಕಂಡು ಹಿಡಿಯಲು ಪ್ರಯೋಗ ಮಾಡುತ್ತ ಅವರು ಬಹಳ ಸಮಯವನ್ನು ವ್ಯಯಿಸಿದರು. ಸಮುದ್ರದ ಮೇಲೆ ವಿದೇಶ ಪ್ರಯಾಣದಲ್ಲಿದ್ದಾಗ ಕಡಲಿನ ನೀಲಿ ಬಣ್ಣದ ಕಾರಣವನ್ನು ಅರಿಯಲು ಪ್ರಯೋಗ ಮಾಡುತ್ತ ಹಡಗಿನ ತುಂಬ ಅಲೆದಾಡುತ್ತಿದ್ದರು. ಆಕಾಶದ ನೀಲಿ ಬಣ್ಣ ರಾಮನ್ ರ ಕುತೂಹಲ ಕೆರಳಿಸಿ ಪ್ರಯೋಗಕ್ಕೆ ತೊಡಗಿಸಿತು. ಹಾಗೇ ಬಗೆಬಗೆಯ ಹೂಗಳ ಬಣ್ಣದಿಂದಲೂ ಅವರು ಆಶ್ಚರ್ಯಚಕಿತರಾಗುತ್ತಿದ್ದರು. ವಾತಾವರಣದಲ್ಲಿಯ ಧೂಳಿನ ಕಣಗಳು ಬೆಳಕನ್ನು ಭಾಗಶಃ ಚದುರಿಸುವವು. ಹೀಗೆ ಬೆಳಕು ಚದುರಿದಾಗ, ಅದರ ಎಲ್ಲ ಬಣ್ಣಗಳೂ ಚದುರುವುವು. ಹೆಚ್ಚು ಚದುರದ ಕೆಂಪುಬೆಳಕು ದಿಗಂತದ ಸಮೀಪ ಸೂರ್ಯ ಕಾಣುವ ಪ್ರದೇಶದಲ್ಲಿ ಪ್ರಜ್ವಲಿಸುವುದು. ಉಳಿದದ್ದು ಆಕಾಶಕ್ಕೆ ನೀಲಿ ಬಣ್ಣವನ್ನು ನೀಡುವುದು. ಬೆಳಕು ಚದುರುವಾಗ ಶಕ್ತಿಯ ಸ್ವೀಕಾರ ಅಥವಾ ದಾನ ಬೆಳಕಿನ ತರಂಗಾಂತರವನ್ನು ನಿರ್ದಿಷ್ಟವಾಗಿ ಬದಲಾಯಿಸುವ ಸಾಧ್ಯತೆ ಲಕ್ಷದಲ್ಲೊಂದು ಮಾತ್ರ. ಎಂದರೆ ಒಂದು ಲಕ್ಷ ಬೆಳಕಿನ ಕಣಗಳು ಚದುರಿದಾಗ ಒಂದು ಮಾತ್ರ ರಾಮನ್ ಪರಿಣಾಮಕ್ಕೆ ಒಳಗಾಗುವುದು, ಎನ್ನುವ ವಿಚಾರ ಬೆಳಕಿಗೆ ಬಂತು. ಇದನ್ನೇ “ರಾಮನ್ ಪರಿಣಾಮ” ಎಂದು ಕರೆಯಲಾಗುತ್ತದೆ. ಇದು ಅನ್ವಯಿಕ ಉಪಯುಕ್ತತೆಯುಳ್ಳ ತತ್ವ. ವಿವರಣೆ: ಯಾವುದೇ ಒಂದು ಬಣ್ಣದ ಉದಾಹರಣೆಗೆ ಕೆಂಪು, ನೀಲಿ, ಹಳದಿ ಇತ್ಯಾದಿ ಬೆಳಕಿನ ಕಿರಣದಂಡವನ್ನು ಅಶ್ರಕದ ಮೂಲಕ ಹಾಯಿಸಿ ಬಿಳಿತೆರೆಯ ಮೇಲೆ ಬೀಳಿಸಿದರೆ ಅದರ ರೋಹಿತ ದೊರೆಯುವುದು. ಇದರಲ್ಲಿ ಕೆಲವು ಉಜ್ವಲ ರೇಖೆಗಳು ಎದ್ದುಕಾಣುವುವು. ಇವೆಲ್ಲವೂ ಮೂಲ ಬೆಳಕಿನ ಬಣ್ಣದವೇ ಆಗಿ ತೋರಿದರೂ ಛಾಯೆಗಳಲ್ಲಿ ಸಂಯುಕ್ತವಾಗಿರುತ್ತದೆ ಮತ್ತು ಅಶ್ರಕ ಅದನ್ನು ವಿಭಜಿಸಿದೆ ಎಂದು ತಿಳಿಯುವುದು. ಆ ಒಂದೊಂದು ಘಟಕದ (ಅಂದರೆ ಛಾಯೆಯ) ಅಲೆಯ ಉದ್ದ ಬೇರೆ ಬೇರೆ ಇರುವುದರಿಂದ ಅದು ರೋಹಿತದಲ್ಲಿ ತನಗೇ ವಿಶಿಷ್ಟವಾದ ಸ್ಥಾನವನ್ನು ಪಡೆಯುತ್ತದೆ. ಈಗ ಅದೇ ಬೆಳಕನ್ನು ಮೊದಲು ಪಾರದರ್ಶಕ ಪದಾರ್ಥದ ಮೂಲಕವೂ ಮತ್ತೆ ಅಶ್ರಕದ ಮೂಲಕವೂ ಹರಿಸಿ ಅದರ ರೋಹಿತವನ್ನು ಪಡೆದರೆ ಇದರಲ್ಲಿ ಮೊದಲಿದ್ದ ಗೆರೆಗಳ ಜೊತೆಗೆ ಕೆಲವು ಹೊಸ ಗೆರೆಗಳು ಕಂಡುಬರುವುವು. ಆದ್ದರಿಂದ ಮೂಲ ಬೆಳಕಿನಲ್ಲಿ ಇದ್ದ ವಿವಿಧ ಅಲೆಯುದ್ದದ ರಶ್ಮಿಗಳ ಜೊತೆಗೆ ಹೊಸ ಅಲೆಯುದ್ದವೂ ಸೇರಿಕೊಂಡಿವೆ ಎಂದು ತೀರ್ಮಾನಿಸಬೇಕಾಗುವುದು. ಬೆಳಕಿನ ಹಾದಿಯಲ್ಲಿ ಪಾರದರ್ಶಕ ಪದಾರ್ಥ ಅಡ್ಡಬರುವುದರಿಂದ ಈ ಪರಿಣಾಮ ಕಂಡುಬರುತ್ತದೆ. ಇದೇ ರಾಮನ್ ಪರಿಣಾಮ. ಇದರ ಅಧ್ಯಯನದಿಂದ ಪಾರದರ್ಶಕ ಪದಾರ್ಥದ ಅಣುರಚನೆಯ ಬಗ್ಗೆ ಮಾಹಿತಿ ಪಡೆಯಬಹುದು. ಭೌತವಿಜ್ಞಾನ ಸಂಶೋಧನೆಗಳಲ್ಲಿ ರಾಮನ್ ಪರಿಣಾಮಕ್ಕೆ ಮಹತ್ತ್ವದ ಸ್ಥಾನವಿದೆ. ಇದರ ಆವಿಷ್ಕಾರ ಕಲ್ಕತ್ತದಲ್ಲಾದರೂ ರಾಮನ್ ಇದನ್ನು ಪ್ರಕಟಿಸಿದ್ದು ಬೆಂಗಳೂರಿನಲ್ಲಿ (28-2-1928). ೧೯೩೦ರ ನಂತರ ೧೯೩೩ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ರಾಮನ್ ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವಾಗಿ ಮಾಡಿಕೊಂಡರು. ಮರುವರ್ಷ ಇಂಡಿಯನ್ ಅಕೆಡಮಿ ಆಫ್ ಸೈನ್ಸಸ್‌ನ್ನು ಖಾಸಗಿಯಾಗಿ ತಮ್ಮ ಸಂಚಾಲಕತ್ವದಲ್ಲಿ ಸ್ಥಾಪಿಸಿದರು. ಇದರ ಉದ್ದೇಶಗಳಿಷ್ಟು: ಪ್ರಥಮದರ್ಜೆಯ ಸಂಶೋಧನೆ ಪ್ರಬಂಧಗಳನ್ನು ಪ್ರಕಟಿಸುವುದು. ವಿಜ್ಞಾನಸಂಬಂಧ ಸಮಸ್ಯೆಗಳ ಚರ್ಚೆಗೆ ಹೊಸ ವೇದಿಕೆ ಒದಗಿಸುವುದು. ಭಾರತದ ವೈಜ್ಞಾನಿಕ ಹಾಗೂ ಔದ್ಯಮಿಕ ಸಂಶೋಧನೆಗಳನ್ನು ಸಂಘಟಿಸುವುದು. ಈ ಉದ್ದೇಶ ಸಿದ್ಧಿಗಾಗಿ ಸಂಶೋಧನ ಮಾಸಿಕವೊಂದನ್ನು (ಪ್ರೊಸೀಡಿಂಗ್ಸ್ ಆಫ್ ದಿ ಇಂಡಿಯನ್ ಅಕೆಡೆಮಿ) ಸಹ ರಾಮನ್ ಪ್ರಾರಂಭಿಸಿದರು. ತಮ್ಮ ನೆಚ್ಚಿನ ವಿಜ್ಞಾನ ಮಂದಿರವನ್ನು ಇವರು ಬೆಂಗಳೂರಿನ ಹೆಬ್ಬಾಳ ಎಂಬಲ್ಲಿ ಕಟ್ಟಿಸಿದರು (1948). 1939ರಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸಿನ ನಿರ್ದೇಶಕತ್ವವನ್ನು ಬಿಟ್ಟು ಕೊಟ್ಟು ಕೇವಲ ಭೌತವಿಜ್ಞಾನ ವಿಭಾಗದ ಮುಖ್ಯರಾಗಿ ಉಳಿದರು. 1948ರಲ್ಲಿ ಈ ಹೊಣೆಗಾರಿಕೆಯನ್ನೂ ಕಳಚಿಕೊಂಡು ಸ್ವಂತ ಮಂದಿರದ ಪೂರ್ಣಕಾಲದ ಸಂಶೋಧಕ ಮತ್ತು ನೇತಾರರಾದರು. ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಎಂದೇ ಪ್ರಸಿದ್ಧವಾಗಿರುವ ಈ ಮಂದಿರದ ಜೀವನಾಡಿ ಏನಿರಬೇಕು ಎಂಬುದನ್ನು ಸ್ವತಃ ಅವರೇ ಹೀಗೆಂದು ಬರೆದಿದ್ದಾರೆ. ಅದರ ಕನ್ನಡ ಭಾವಾನುವಾದ ಹೀಗಿದೆ : "ನಮ್ಮ ಪ್ರಾಚೀನ ರಾಷ್ಟ್ರಕ್ಕೆ ತಕ್ಕುದಾದಂಥ ವಿಜ್ಞಾನ ಸಂಶೋಧನೆ ಕೇಂದ್ರವನ್ನು ಅಸ್ತಿತ್ವಕ್ಕೆ ತರಬೇಕೆಂಬುದು ನನ್ನ ತೀವ್ರ ಅಭಿಲಾಷೆ. ಈ ಕೇಂದ್ರದಲ್ಲಿ ನಮ್ಮ ದೇಶದ ತೀಕ್ಷ್ಣಮತಿಗಳು ವಿಶ್ವರಹಸ್ಯಗಳನ್ನು ಶೋಧಿಸಬೇಕು; ಮತ್ತು ಹಾಗೆ ಮಾಡುವುದರ ಮೂಲಕ ವಿಶ್ವಚಟುವಟಿಕೆಗಳನ್ನು ನಿಯಂತ್ರಿಸುತ್ತಿರುವ ಅತೀತ ಶಕ್ತಿಯನ್ನು ಗ್ರಹಿಸಲು ನಿಮಗೆ ನೆರವಾಗಬೇಕು. ಆತನ ದಿವ್ಯಕೃಪೆಯಿಂದ ನಮ್ಮ ದೇಶಪ್ರೇಮಿಗಳೆಲ್ಲರೂ ಈ ಕಾರಣವನ್ನು ಪೋಷಿಸುವ ವಿಧಾನವನ್ನು ಕಂಡಾಗ ಮಾತ್ರ ಈ ಗುರಿ ಸಿದ್ಧಿಸಿತು.'' ಅಲ್ಲಿ ಬಹಳಷ್ಟು ಸಂಶೋಧನೆಗಳನ್ನು ಮಾಡಿದರು. ಭಾವಿ ಸಂಶೋಧಕರಿಗೆ ಬಿಟ್ಟುಹೋಗಿರುವ ಈ ಸಂಸ್ಥೆ ವಿಶೇಷವಾಗಿ ಭೌತಶಾಸ್ತ್ರದ ಅತ್ಯಂತ ಪ್ರಮುಖ ಸಂಶೋಧನಾ ಸಂಸ್ಥೆಯಾಗಿದೆ. ಸೃಷ್ಟಿಯ ಸಕಲ ವಿದ್ಯಮಾನಗಳೂ ರಾಮನ್ ಅವರ ಆಸಕ್ತಿಯನ್ನು ಕೆರಳಿಸಿದ್ದುವು, ಎಂದೇ ಇವರ ಮಂದಿರದ ವಸ್ತುಸಂಗ್ರಹಾಲಯ ಮತ್ತು ಪುಸ್ತಕ ಭಂಡಾರಗಳು ವಿಶಾಲವ್ಯಾಪ್ತಿಯುಳ್ಳವಾಗಿವೆ. ಮೂಲತಃ ಇವರು ಭೌತವಿಜ್ಞಾನಿ ಆಗಿದ್ದರೂ ಇವರ ಕುತೂಹಲ ಸಕಲ ಶಾಸ್ತ್ರಗಳನ್ನೂ ಒಳಗೊಂಡಿತ್ತು. ವಿಜ್ಞಾನದಿಂದ ಒದಗುವ ಲಾಭ ಗ್ರಾಮೀಣ ಜನರಿಗೂ ದೊರಕಬೇಕು ಎಂಬುದು ರಾಮನ್ ಅವರ ಅಪೇಕ್ಷೆಯಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ಫಿಸಿಕ್ಸ್ ಫಾರ್ ದಿ ಕಂಟ್ರಿಸೈಡ್ ಎಂಬ ಶೀರ್ಷಿಕೆಯ ಅಡಿಯಲ್ಲಿ ಮೂರು ಪ್ರಸಾರ ಭಾಷಣಗಳನ್ನು ರಾಮನ್ ನೀಡಿದರು. ಪ್ರಕೃತಿಯಲ್ಲಿನ ಬಣ್ಣಗಳು, ಖನಿಜಗಳ ವರ್ಣವೈಭವ, ವಜ್ರಗಳನ್ನು ಕುರಿತ ಶೋಧನೆ, ಖಗೋಳವಿಜ್ಞಾನ-ಹೀಗೆ ಹಲವಾರು ಕ್ಷೇತ್ರಗಳಲ್ಲಿ ಇವರ ಒಲವು ಇತ್ತು. ಇವರು ಹಲವಾರು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರತಿಷ್ಠಿತ ಸಂಶೋಧನ ಪತ್ರಿಕೆಗಳಿಗೆ (ಜರ್ನಲ್ಸ್) ತನಿಯಾಗಿಯೂ ಇತರರೊಡಗೂಡಿಯೂ 350ಕ್ಕೂ ಹೆಚ್ಚಿನ ಸಂಶೋಧನ ಪ್ರಬಂಧಗಳನ್ನು ಬರೆದರು. ರಾಮನ್ ಅವರ ವಿದ್ಯಾಭ್ಯಾಸ, ಸಂಶೋಧನೆ, ಸಿದ್ಧಿ ಎಲ್ಲವೂ ನಡೆದದ್ದು ಭಾರತದ ಒಳಗೇ. ಅಂತಾರಾಷ್ಟ್ರೀಯ ಖ್ಯಾತಿ ಬಂದ ಬಳಿಕ ಮಾತ್ರವೇ ಇವರು ವಿದೇಶ ಪ್ರವಾಸ ಕೈಗೊಂಡರು. ನಿವೃತ್ತಿಯ ನಂತರ ರಾಮನ್ ನಿವೃತ್ತಿಗೊಂಡ ಬಳಿಕ ಇವರ ಸಂಶೋಧನಾ ಕೆಲಸಗಳಿಗಾಗಿ ಸರ್ಕಾರ ಧನಸಹಾಯ ನೀಡುವುದಕ್ಕೆ ಮುಂದಾಯಿತು. ಆದರೆ ಇವರು ತಮ್ಮ ವ್ಯಕ್ತಿ ಸ್ವಾತಂತ್ರ್ಯಕ್ಕೆ ಇದು ಅಡ್ಡಿಯಾಗುವುದೆಂದು ಭಾವಿಸಿ ಆ ಸಹಾಯಧನವನ್ನು ತಿರಸ್ಕರಿಸಿದರು. ಮುಂದೆ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೂ ಇವರ ಹೆಸರನ್ನು ಸೂಚಿಸಲಾಗಿದ್ದು ಅದಕ್ಕೂ ಇವರು ತಮ್ಮ ವಿರೋಧ ವ್ಯಕ್ತಪಡಿಸಿದರು. ಗೌರವ, ಪ್ರಶಸ್ತಿಗಳು ಫೆಲೋ ಆಫ್ ರಾಯಲ್ ಸೊಸೈಟಿ ಸದಸ್ಯತ್ವ (೧೯೨೪) ಸೈನ್ಸ್ ಸೊಸೈಟಿ ಆಫ್ ರೋಮ್ ಎಂಬ ಸಂಸ್ಥೆಯಿಂದ ಮ್ಯಾಬ್ಯುಟಿ ಪದಕ (೧೯೨೮) ನೈಟ್ ಹುಡ್ ಪ್ರಶಸ್ತಿ (೧೯೨೯) ನೋಬೆಲ್ ಪ್ರಶಸ್ತಿ (೧೯೩೦) ಲಂಡನ್ನಿನ ರಾಯಲ್ ಸೊಸೈಟಿಯಿಂದ ಹ್ಯೂಗ್ಸ್ ಪದಕ (೧೯೩೦) ಮೈಸೂರು ಮಹಾರಾಜರಿಂದ, 'ರಾಜ ಸಭಾ ಭೂಷಣ ಗೌರವ' (೧೯೩೫) ಅಮೆರಿಕ ಸಂಯುಕ್ತ ಸಂಸ್ಥಾನದ ಫ್ರಾಂಕ್ಲಿನ್ ಪದಕ (೧೯೪೧) ಭಾರತ ರತ್ನ ಪ್ರಶಸ್ತಿ (೧೯೫೪) ಲೆನಿನ್ ಶಾಂತಿ ಪ್ರಶಸ್ತಿ (೧೯೫೭) ಮರಣ ನವೆಂಬರ್ ೨೧ ೧೯೭೦ ರಲ್ಲಿ, 'ಪ್ರೊ.ರಾಮನ್' ರವರು, ದೇಮಹಳ್ಳಿಯಲ್ಲಿ ನಿಧನರಾದರು. ಹೆಚ್ಚಿನ ಮಾಹಿತಿ ಜಗಕ್ಕೆ ಬೆಳಕಿನ ಬಣ್ಣಗಳ ತೋರಿದ ಭಾರತೀಯ ವಿಜ್ಞಾನಿ ಸಿ.ವಿ.ರಾಮನ್‌; d: 07 ನವೆಂಬರ್ 2019 ಉಲ್ಲೇಖಗಳು Raman Effect: From Studying Cells to Detecting Bombs, Page :14, Author:Murthy, M.S.S., Science Reporter, Feb, 2016 ಬಾಹ್ಯ ಸಂಪರ್ಕಗಳು 'ಐ ಲವ್ ಇಂಡಿಯ,'ಸರ್.ಸಿ.ವಿ.ರಾಮನ್,' 'ಜನಶಕ್ತಿ', 'ರಾಮನ್ ಪರಿಣಾಮ: ಇದು ಬರೀ ಬೆಳಕಲ್ಲೋ ಅಣ್ಣಾ' 27 JAN, (ಸಂಪುಟ 9, ಸಂಚಿಕೆ 5, 1 ಬ್ರವರಿ 2015) 'ಜ್ಞಾನ-ವಿಜ್ಞಾನ'– ಜಯ0 'C.V.RAMAN-THE GREAT INDIAN PHYSICIST,hISTORICAL PHOTOGRAPHS OF INDIAN SUBCONTINENT ವಿಜಯ ಕರ್ನಾಟಕ, ಅನುದಿನವೂ ವಿಜ್ಞಾನ ದಿನವಾಗಲಿ, Feb,28,2016 ಭಾರತದ ವಿಜ್ಞಾನಿಗಳು ನೊಬೆಲ್ ಪ್ರಶಸ್ತಿ ಪುರಸ್ಕೃತ ಭಾರತೀಯರು ನೊಬೆಲ್ ಪ್ರಶಸ್ತಿ ಪುರಸ್ಕೃತರು ಭಾರತ ರತ್ನ ಪುರಸ್ಕೃತರು ವಿಜ್ಞಾನಿಗಳು ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ
1042
https://kn.wikipedia.org/wiki/%E0%B2%9C%E0%B2%97%E0%B2%A6%E0%B3%80%E0%B2%B6%E0%B3%8D%E0%B2%9A%E0%B2%82%E0%B2%A6%E0%B3%8D%E0%B2%B0%20%E0%B2%AC%E0%B3%8B%E0%B2%B8%E0%B3%8D
ಜಗದೀಶ್ಚಂದ್ರ ಬೋಸ್
ಸರ್ ಜಗದೀಶ್‌ಚಂದ್ರ ಬೋಸ್, ಸಿಎಸ್‌ಐ, ಸಿಐಈ, ಎಫ್‌ಆರ್‌ಎಸ್ (ನವೆಂಬರ್ ೩೦, ೧೮೫೮ – ನವೆಂಬರ್ ೨೩, ೧೯೩೭) ಒಬ್ಬ ಬಹುಮುಖ ಪ್ರತಿಭೆಯ ಬಂಗಾಲಿ ಮೂಲದ ಭೌತಶಾಸ್ತ್ರ ಹಾಗು ಜೀವಶಾಸ್ತ್ರ ವಿಜ್ಞಾನಿ. ರೇಡಿಯೊ, ದೂರಸಂಪರ್ಕ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ ಹೀಗೆ ಅನೇಕ ವಿಜ್ಞಾನದ ವಿಭಾಗದಲ್ಲಿ ಸಂಶೋಧನೆ ನಡೆಸಿದ್ದ ಬೋಸರು ಅವರ ಕಾಲದ ಶ್ರೇಷ್ಠ ವಿಜ್ಞಾನಿಗಳಲ್ಲೊಬ್ಬರಾಗಿದ್ದರು. ಬೋಸರು ಸಸ್ಯಗಳು ಸಹ ಪ್ರಾಣಿಗಳ ಹಾಗೆ ಹೊರ ಪ್ರಭಾವಗಳಿಗೆ ಸ್ಪಂದಿಸುತ್ತವೆಂದು ಜಗತ್ತಿಗೆ ಸಾಬೀತು ಮಾಡಿ ತೊರಿಸಿದವರು. ಭಾರತ ಉಪಖಂಡದಲ್ಲಿ ಪ್ರಯೋಗವಿಜ್ಞಾನಕ್ಕೆ ಅಡಿಪಾಯ ಹಾಕಿದವರು ಇವರು. ರೇಡಿಯೋ ವಿಜ್ಞಾನದ ತಂದೆ ಎಂದೂ, ಬೆಂಗಾಲಿ ವಿಜ್ಞಾನಸಾಹಿತ್ಯದ ತಂದೆ ಎಂದೂ ಇವರನ್ನು ಪರಿಗಣಿಸಲಾಗುತ್ತದೆ. ತಮ್ಮ ಸಂಶೋಧನೆಗಳಿಗೆ ನೆರವಾಗುವಂತಹ ಅನೇಕ ಉಪಕರಣಗಳನ್ನು (ಕ್ರೆಸ್ಕೊಗ್ರಾಫ್ ಹಾಗು ಕೊಹೆರರ್) ತಾವೇ ಸ್ವತಃ ಕಂಡುಹಿಡಿದಿದ್ದರು. ಅಮೇರಿಕದ ಪೇಟೆಂಟ್ ತೆಗೆದುಕೊಂಡವರಲ್ಲಿ ಭಾರತೀಯ ಉಪಖಂಡದ ಮೊದಲಿಗರು. ಇದು ಆದದ್ದು ೧೯೦೪ರಲ್ಲಿ. ಅಂದಿನ ಲೀಗ್ ಆಫ್ ನೇಷನ್ಸ್ ಸಂಸ್ಥೆಯ ಬೌದ್ಧಿಕ ಸಹಕಾರ ಸಮಿತಿಯ ಸದಸ್ಯರಾಗಿದ್ದರು. ಜೀವಿ ಅಜೀವಿಗಳಲ್ಲಿಯೂ ಸಸ್ಯ ಪ್ರಾಣಿಗಳಲ್ಲಿಯೂ ಒಂದು ತೆರನಾದ ಭೌತ ಏಕತೆ ಇರುವುದನ್ನು ಗುರುತಿಸಿ ಇವರು ಮಾಡಿದ ಪ್ರಯೋಗಗಳು ಹಾಗೂ ಮೂಲಭೂತ ಸಂಶೋಧನೆಗಳು ಪ್ರಪಂಚದ ಗಮನವನ್ನು ಭಾರತದತ್ತ ಸೆಳೆದುವು. ಕಳೆದ ಶತಮಾನದ ಕೊನೆಗೆ ಜೀವಭೌತವಿಜ್ಞಾನದಲ್ಲಿ ಸಂಗೃಹೀತವಾಗಿದ್ದ ಜ್ಞಾನವನ್ನೇ ಪ್ರಶ್ನಿಸಿ ಆ ಕ್ಷೇತ್ರಕ್ಕೆ ಹೊಸ ತಿರುವುಕೊಟ್ಟರು. ಬೋಸ್ ಸಂಶೋಧನ ಸಂಸ್ಥೆ ಸ್ಥಾಪಿಸಿ ಭಾರತದಲ್ಲಿ ಉನ್ನತ ಸಂಶೋಧನೆಗಾಗಿ ಅನುವುಮಾಡಿಕೊಟ್ಟರು. ಸಕಾಲದಲ್ಲಿ ಮನಸ್ಸು ಮಾಡಿದ್ದರೆ ಬಾನುಲಿ ಪ್ರಸಾರ ಮತ್ತು ಅಭಿಗ್ರಹಣ ತಂತ್ರವನ್ನು ಶೋಧಿಸಿದ ಸಂಪೂರ್ಣ ಕೀರ್ತಿಗೆ ಮಾರ್ಕೊನಿಯ ಬದಲು ಇವರೇ ಪಾತ್ರರಾಗಬಹುದಿತ್ತು. ಜಗದೀಶಚಂದ್ರರು ಸದ್ಗೃಹಸ್ಥರು, ಸ್ಫೂರ್ತಿದಾಯಕ ಪ್ರಾಧ್ಯಾಪಕರು, ಸಮರ್ಥ ಸಂಶೋಧನ ನಿರ್ದೇಶಕರು, ಉತ್ತಮ ಉಪಕರಣಗಳ ಉಪಜ್ಞೆಕಾರರು, ಸಾಹಿತ್ಯ ಪ್ರೇಮಿ, ಸರಸವಾಗ್ಮಿ, ಪ್ರೌಢ ಪ್ರಬಂಧ ಪುಸ್ತಕಾದಿಗಳ ಲೇಖಕರು, ಭಾರತೀಯ ಸನಾತನ ಸಂಸ್ಕೃತಿಯ ಅಭಿಮಾನಿಗಳು. ಎಲ್ಲಕ್ಕೂ ಮಿಗಿಲಾಗಿ ಉಜ್ಜ್ವಲ ರಾಷ್ಟ್ರಪ್ರೇಮಿ. ಬಾಲ್ಯ ಮತ್ತು ವಿದ್ಯಾಭ್ಯಾಸ ಬೋಸ್ ಅವರು ಭಾರತದ ಬಂಗಾಳ ಪ್ರಾಂತ್ಯದಲ್ಲಿರುವ ಮೈಮನಸಿಂಗ್ ಎಂಬ ಈಗಿನ ಬಾಂಗ್ಲಾದೇಶಕ್ಕೆ ಸೇರಿದ ಪ್ರಾಂತ್ಯದಲ್ಲಿ ಜನಿಸಿದರು. ತಂದೆ ಭಗವಾನಚಂದ್ರರು ಫರೀದಪುರದಲ್ಲಿ ಉಪವಿಭಾಗಾಧಿಕಾರಿಗಳಾಗಿದ್ದರು. ತಾಯಿ ಸಾಂಪ್ರದಾಯಿಕ ಗೃಹಿಣಿ, ವಿಶಾಲ ಮನೋಭಾವದ ಮಹಿಳೆ. ಜಗದೀಶಚಂದ್ರರೇ ಮುಂದೆ ಬರೆದಂತೆ ತಾವು ಶಾಲಾ ಬಾಲಕರಾಗಿದ್ದಾಗ ಅಸ್ಪೃಶ್ಯಕುಲದ ತಮ್ಮ ಗೆಳೆಯರನ್ನು ಮನೆಗೆ ಕರೆದುಕೊಂಡು ಹೋದಾಗ ಅವರ ತಾಯಿ ಯಾವ ಭೇದವನ್ನು ಮಾಡದೆ ಮಾತೆಯ ಮಮತೆ ತೋರುತ್ತಿದ್ದರಂತೆ. ಜಗದೀಶಚಂದ್ರರಿಗೆ ಒಬ್ಬ ಅಕ್ಕ ಮತ್ತು ನಾಲ್ಕು ತಂಗಿಯರು. ತಂದೆ ಭಗವಾನಚಂದ್ರರಿಗೆ ಭಾರತೀಯ ಸಂಪ್ರದಾಯ ಸಂಸ್ಕೃತಿಗಳಲ್ಲಿ ಅಪಾರ ಗೌರವ ಮತ್ತು ವಿಶ್ವಾಸ. ಆಗಿನ ವಾತಾವರಣದಲ್ಲಿ ಶ್ರೀಮಂತರು ಮತ್ತು ಅಧಿಕಾರಿಗಳು ಮಕ್ಕಳನ್ನು ಇಂಗ್ಲಿಷ್ ಶಾಲೆಗೆ ಕಳುಹಿಸುವುದು ಪ್ರತಿಷ್ಠೆಯ ಕುರುಹಾಗಿತ್ತು. ಆದರೆ ಭಗವಾನಚಂದ್ರರು ಹೀಗಲ್ಲ. ಸ್ವತಃ ಶಿಕ್ಷಣತಜ್ಞರೂ ಆಗಿದ್ದು ಔದ್ಯಮಿಕ ಮತ್ತು ತಾಂತ್ರಿಕ ಶಾಲೆಗಳನ್ನು ಸ್ಥಾಪಿಸಿದ್ದ ಇವರು ತಮ್ಮ ಮಗ ಮಾತೃಭೂಮಿಯ ನಿಜವಾದ ಪರಿಚಯ ಮಾಡಿಕೊಳ್ಳಲೆಂಬ ಘನ ಉದ್ದೇಶದಿಂದ ಈತನನ್ನು ಸನಾತನ ಮಾದರಿಯ ಒಂದು ಪಾಠಶಾಲೆಗೆ ಸೇರಿಸಿದರು. ತಂದೆಯವರ ಈ ನಿರ್ಣಯ ಮುಂದೆ ತಮ್ಮಲ್ಲಿ ರಾಷ್ಟ್ರೀಯ ಭಾವನೆ ಬೆಳೆಯಲು ಕಾರಣವಾಯಿತೆಂದು ಜಗದೀಶಚಂದ್ರರು ಉದ್ಧರಿಸಿದ್ದಾರೆ. ಆ ಶಾಲೆಯಲ್ಲಿಯೇ ಅವರಿಗೆ ನಿಸರ್ಗದ ಆಕರ್ಷಣೆ ಹುಟ್ಟಿತು. ಜೀವ ಅಜೀವಿಗಳ ವ್ಯವಹಾರಗಳನ್ನೆಲ್ಲ ಸೂಕ್ಷ್ಮವಾಗಿ ಗಮನಿಸುವ ಪ್ರವೃತ್ತಿ ಹೀಗೆ ಬಾಲ್ಯದಲ್ಲಿಯೇ ಬೆಳೆಯಿತು. ಆಗ ಅವರ ಮೇಲೆ ವಿಶೇಷ ಬೀರಿದ ವ್ಯಕ್ತಿಯೆಂದರೆ ಅವರ ತಂದೆಯೇ. ಸೆರೆಮನೆಯಿಂದ ಬಿಡುಗಡೆಯಾಗಿ ಬಂದಿದ್ದ ಒಬ್ಬ ಭಾರೀ ಡಕಾಯಿತನನ್ನು ಮಗು ಜಗದೀಶನ ಯೋಗಕ್ಷೇಮ ನೋಡಿಕೊಳ್ಳಲು ನಿಯಮಿಸಿ ಆ ಡಕಾಯಿತನನ್ನು ಸುಧಾರಿಸಿದ ಅಸಾಧಾರಣ ವ್ಯಕ್ತಿ ಭಗವಾನಚಂದ್ರರು. ಕಲಕತ್ತೆಯ ಸೇಂಟ್ ಝೇವಿಯರ್ ಕಾಲೇಜು ಹಾಗೂ ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಓದಿ ಪದವೀಧರರಾದರು. ಆಗಿನ ಇತರ ಪ್ರತಿಭಾಶಾಲಿ ತರುಣರಂತೆ ಇವರು ಕೂಡ ಇಂಗ್ಲೆಂಡಿಗೆ ಹೋಗಿ ಐ.ಸಿ.ಎಸ್ ಪರೀಕ್ಷೆಗೆ ಕಟ್ಟಬೇಕೆಂದು ಯೋಚಿಸಿದರು. ತಂದೆ ಭಗವಾನಚಂದ್ರರಿಗೆ ಮಗ ತಮ್ಮಂತೆ ಸರಕಾರದ ಗುಲಾಮನಾಗುವುದು ಇಚ್ಛೆಯಿರಲಿಲ್ಲ. ಆತನಿಗೆ ವೈದ್ಯಕೀಯ ಅಥವಾ ಇನ್ನಾವುದೋ ವಿಜ್ಞಾನ ವೃತ್ತಿ ಆಯಲು ಸೂಚಿಸಿದರು. ಜಗದೀಶಚಂದ್ರರು 1880ರಲ್ಲಿ ಲಂಡನ್ನಿಗೆ ವೈದ್ಯಕೀಯವನ್ನು ಕಲಿಯಲು ತೆರಳಿ ಲಂಡನ್ನಿನ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಯಾಗಿ ಸೇರಿದರು. ಅಲ್ಲಿ ಮೊದಲನೆಯ ವರ್ಷವೇನೋ ಸುಗಮವಾಗಿ ಕಳೆಯಿತು. ಆದರೆ ಬಾಲಕವಾಗಿದ್ದಾಗ ಇವರಿಗೆ ಅಂಟಿಕೊಂಡಿದ್ದ ಕಾಲಾ ಅಜಾರ್ ಎಂಬ ಜ್ವರ ಇಂಗ್ಲೆಂಡಿನಲ್ಲಿ ಮತ್ತೆ ಮರುಕಳಿಸಿ ಇವರನ್ನು ಹಣ್ಣು ಮಾಡಿತು. ಇವರ ಗುರುಗಳು ಮತ್ತು ವೈದ್ಯರು ಇವರು ವೈದ್ಯಕೀಯ ಶಿಕ್ಷಣವನ್ನೇ ಬಿಡಬೇಕೆಂದು ಸಲಹೆ ಮಾಡಿದರು. ಹೀಗೆ ಇವರು ಅನಿವಾರ್ಯವಾಗಿ ಲಂಡನ್ ಬಿಟ್ಟು ಕೇಂಬ್ರಿಜಿಗೆ ಹೋಗಿ ವಿಜ್ಞಾನದ ವಿದ್ಯಾರ್ಥಿಯಾದರು. 1884ರಲ್ಲಿ ಕೇಂಬ್ರಿಜ್ ವಿಶ್ವವಿದ್ಯಾಲಯದಿಂದ ಬಿ.ಎ. ಮತ್ತು ಮರುವರ್ಷ ಲಂಡನ್ ವಿಶ್ವವಿದ್ಯಾಲಯದಿಂದ ಬಿ.ಎಸ್.ಸಿ. ಪದವಿ ಪಡೆದರು. ನಂತರದ ಜೀವನ ೧೮೮೪ರಲ್ಲಿ ಕಲ್ಕತ್ತೆ ಮರಳಿ ಬಂದು ಭೌತಶಾಸ್ತ್ರದ ಪ್ರಾಧ್ಯಾಪಕರಾಗಿ ಪ್ರೆಸಿಡೆನ್ಸಿ ಕಾಲೇಜನ್ನು ಸೇರಿಕೊಂಡರು. ಅಲ್ಲಿ ಬ್ರಿಟೀಷರ ಜನಾಂಗಭೇದವಿತ್ತು. ಸರಿಸಮಾನ ಸ್ಥಾನಗಳಲ್ಲಿದ್ದ ಬಿಳಿಯ ಪ್ರಾಧ್ಯಾಪಕರ ಮೂರನೆಯ ಎರಡರಷ್ಟು (2/3) ಪಗಾರ ಮಾತ್ರ ಭಾರತೀಯ ಪ್ರಾಧ್ಯಾಪಕರಿಗೆ ಕೊಡಬೇಕೆಂಬ ದುರ್ನಿಯಮ ಜಾರಿಗೆ ಬಂದಿತ್ತು. ಜಗದೀಶಚಂದ್ರರು ಇದನ್ನು ಪ್ರತಿಭಟಿಸಿ ಸಂಬಳ ತೆಗೆದುಕೊಳ್ಳದೇ ಮೂರು ವರ್ಷ ಪರ್ಯಂತ ದುಡಿದರು. ಇದೇ ಅವಧಿಯಲ್ಲಿ ವಿಕ್ರಮಪುರದ ದುರ್ಗಾಮೋಹನದಾಸರ ಮಗಳಾದ ಅಬಲಾರವರೊಡನೆ ಬೋಸರ ವಿವಾಹವಾಯಿತು (1887). ಈಕೆ ವಿದ್ಯಾರ್ಹತೆಯಲ್ಲಿ ಗಂಡನಿಗೆ ಸರಿಜೋಡಿ. ಈಗ್ಗೆ ಒಂದು ಶತಮಾನದಷ್ಟು ಹಿಂದೆಯೇ ಅಬಲಾದೇವಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರೆಂಬ ಸಂಗತಿ ಇಂದು ಅಚ್ಚರಿ ಮೂಡಿಸುವಂತಿದೆ. ಪತಿಯ ಸ್ವಾಭಿಮಾನಕ್ಕೆ ಮೆಚ್ಚಿ ಈಕೆ ಅವರಿಗೆ ಯೋಗ್ಯ ಸಹಧರ್ಮಿಣಿ ಆದರು. ಬೋಸರ ವೈವಾಹಿಕ ಜೀವನ ಸುಖಮಯವಾಗಿ ಆದರ್ಶವಾಗಿತ್ತು. ಮೂರು ವರ್ಷಗಳ ಕಾಲ ಪ್ರೆಸಿಡೆನ್ಸಿ ಕಾಲೇಜಿನ ಪ್ರಿನ್ಸಿಪಾಲ್ ಮತ್ತು ವಿದ್ಯಾ ಇಲಾಖೆಯ ನಿರ್ದೇಶಕ ಆಗಿದ್ದ ಬ್ರಿಟಿಷ್ ಅಧಿಕಾರಿ ಬೋಸರ ಪ್ರತಿಭೆ ಮತ್ತು ವ್ಯಕ್ತಿತ್ವ ಗಮನಿಸಿ ಅವರ ಆತ್ಮೀಯ ಮಿತ್ರನಾದ. ಹೀಗೆ ಬ್ರಿಟಿಷರಿಂದ ಭಾರತೀಯರಿಗೆ ಆಗುತ್ತಿದ್ದ ಅವಮಾನದ ವಿರುದ್ಧ ಗಳಿಸಿದ ನೈತಿಕ ಜಯದ ಕುರುಹಾಗಿ ಜಗದೀಶಚಂದ್ರ ಬೋಸರಿಗೆ ಹಿಂದಿನ ಮೂರು ವರ್ಷಗಳ ಸಂಪೂರ್ಣ ಪಗಾರ ಪಾವತಿಯಾಯಿತು. ಸಂಶೋಧನೆಗೆ ಅಗತ್ಯವಾದ ಸಲಕರಣೆಗಳು ಮತ್ತು ಹಣದ ಸಹಾಯ ಇರಲಿಲ್ಲ. ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಮೊದಲಿಗೆ ಪ್ರಯೋಗಾಲಯದ ಸೌಕರ್ಯವಿರಲಿಲ್ಲ. ಹಲವು ವರ್ಷಗಳ ಪ್ರಯತ್ನಾನಂತರ ಒಂದು ಸಣ್ಣ ಪ್ರಯೋಗಾಲಯ ಮಂಜೂರಾಯಿತು. ಅಲ್ಲಿ ಅವರು ತಮ್ಮ ವೈಜ್ಞಾನಿಕ ಸಂಶೋಧನೆಗಳನ್ನು ನಡೆಸಿದರು. ಅವರ ಮೆಚ್ಚಿನ ಕ್ಷೇತ್ರ ವಿದ್ಯುತ್ ತರಂಗಗಳದಾಗಿತ್ತು. ಮ್ಯಾಕ್ಸ್‌ವಲ್ಲನ ವಿದ್ಯುತ್‌ಕಾಂತ ಕ್ಷೇತ್ರದ ತತ್ತ್ವ ಪ್ರಕಟವಾಗಿ ಆಗ ಕೇವಲ ಎರಡು ದಶಕಗಳು ಸಂದಿದ್ದುವು. ಹರ್ಟ್ಸ್ ಮೊದಲಾಗಿ ಅನೇಕ ಪ್ರಥಮ ದರ್ಜೆಯ ಭೌತವಿಜ್ಞಾನಿಗಳು ವಿದ್ಯುತ್‌ಕ್ರಾಂತೀಯ ಅಲೆಗಳ ಮೇಲೆ ಸಂಶೋಧನೆ ನಡೆಸಿದ ಕಾಲವದು. ಸ್ಫಟಿಕಗಳಿಂದ ವಿದ್ಯುತ್ ತರಂಗಗಳ ಧ್ರುವೀಕರಣ ಎಂಬ ಇವರ ಪ್ರಥಮ ಸಂಶೋಧನಾಪ್ರಬಂಧ 1895ರಲ್ಲಿ ಜರ್ನಲ್ ಆಫ್ ದಿ ಏಶಿಯಾಟಿಕ್ ಸೊಸೈಟಿ ಆಫ್ ಬೆಂಗಾಲ್ ಎಂಬ ಪ್ರತಿಕೆಯಲ್ಲಿ ಪ್ರಕಟವಾಯಿತು. ಅದೇ ವರ್ಷ ವಿದ್ಯುತ್ ವಕ್ರೀಭವನ ಸೂಚ್ಯಂಕಗಳ ನಿರ್ಣಯ ಎಂಬ ಎರಡನೆಯ ಸಂಶೋಧನಪ್ರಬಂಧ ಎಲೆಕ್ಟ್ರಿಶಿಯನ್ ಎಂಬ ಪ್ರತಿಕೆಯಲ್ಲಿ ಪ್ರಕಟವಾದಾಗ ಬೋಸರ ಸಂಶೋಧನೆಗೆ ಮಹತ್ತ್ವದ ತಿರುವು ದೊರೆಯಿತು. ಏಕೆಂದರೆ ಲಂಡನ್ನಿನ ರಾಯಲ್ ಸೊಸೈಟಿ ಇವರ ಸಂಶೋಧನೆಗೆ ಮನ್ನಣೆಕೊಟ್ಟು ಆ ಲೇಖನವನ್ನು ಪ್ರಕಟಿಸಿತಲ್ಲದೇ ಬೋಸರಿಗೆ ಸಂಶೋಧನೆ ಮುಂದುವರಿಸಲು ಸಹಾಯಧನವನ್ನು ಕೂಡ ಕೊಡಮಾಡಿತು. ಎರಡು ವರ್ಷಗಳ ತರುವಾಯ ಆಗಿನ ಬಂಗಾಲ ಸರಕಾರ ಸಹ ಬೋಸರಿಗೆ ಸಂಶೋಧನೆಗೆಂದು ಎಲ್ಲ ಅನುಕೂಲತೆಗಳನ್ನು ಒದಗಿಸಿಕೊಟ್ಟಿತು. ಇಟಲಿಯ ಮಾರ್ಕೊನಿಯೂ ಸೇರಿದಂತೆ ಆ ಕಾಲಕ್ಕೆ ಹಲವು ವಿಜ್ಞಾನಿಗಳು ಟೆಲಿಗ್ರಾಫ್ ಸಂದೇಶಗಳನ್ನು ತಂತಿಯ ಸಹಾಯವಿಲ್ಲದೇ ಕಳಿಸುವ ವಿಧಾನಗಳ ಕುರಿತು ಸಂಶೋಧನೆ ನಡೆಸಿದ್ದರು. ಇದನ್ನು ಪ್ರಪ್ರಥಮವಾಗಿ ಮಾಡಿದ ಕೀರ್ತಿ ಭಾರತೀಯ ವಿಜ್ಞಾನಿ ಬೋಸರಿಗೆ ಸಲ್ಲಬೇಕು. 1895ರಲ್ಲಿಯೇ ಅವರು ತಾವು ಸಂಶೋಧಿಸಿ ನಿರ್ಮಿಸಿದ್ದ ನಿಸ್ತಂತು ಪ್ರೇಷಕವನ್ನು ಕಲಕತ್ತೆಯ ಪುರಭವನದಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಿದರು. ಯಾವ ತಂತಿಯ ಸಂಪರ್ಕವೂ ಇಲ್ಲದೇ ದೂರದಲ್ಲಿಟ್ಟಿದ್ದ ತಮ್ಮ ಉಪಕರಣದಿಂದ ವಿದ್ಯುತ್ ತರಂಗಗಳನ್ನು ಉತ್ಪಾದಿಸಿ ಒಂದು ಕೋಣೆಯಲ್ಲಿಟ್ಟಿದ್ದ ಭಾರವಾದ ವಸ್ತುವನ್ನು ಚಲಿಸುವಂತೆ ಮಾಡಲು ಮತ್ತು ಒಂದು ವಿಶೇಷ ವಿದ್ಯುತ್ ಗಂಟೆ ಬಾರಿಸುವಂತೆ ಮಾಡಲು ಅವನ್ನು ಉಪಯೋಗಿಸಿದರು. ಅವರ ಆ ಉಪಕರಣಕ್ಕೆ ಕೊಹಿಯರರ್ ಎಂದು ಹೆಸರು. ಇಂದಿನ ಬಾನುಲಿ ವ್ಯವಸ್ಥೆಯ ಆದಿಮರೂಪ ಇದಾಗಿದ್ದಿತೆಂದು ಗಮನಿಸಿದರೆ ಅವರ ಸಂಶೋಧನೆಯ ಮಹತ್ತ್ವ ಗೊತ್ತಾಗುತ್ತದೆ. ಈ ಶೋಧನೆಯ ವಿವರವನ್ನು 1896ರಲ್ಲಿ ಲಂಡನ್ನಿನ ರಾಯಲ್ ಸೊಸೈಟಿಗೆ ತಿಳಿಸಿದಾಗ ಅದು ಆಶ್ಚರ್ಯಚಕಿತವಾಯಿತು. ರಾಯಲ್ ಸೊಸೈಟಿ ಮುಂದೆ ಅವರನ್ನು ಉಪನ್ಯಾಸಗಳಿಗಾಗಿ ಮೂರು ಬಾರಿ ಆಹ್ವಾನಿಸಿ ಗೌರವಿಸುವುದಕ್ಕೆ ಇದು ನಾಂದಿಯಾಯಿತು. ಅದೇ ವರ್ಷ ಲಂಡನ್ ವಿಶ್ವವಿದ್ಯಾಲಯ ಬೋಸರಿಗೆ ಡಾಕ್ಟರ್ ಆಫ್ ಸೈನ್ಸ್ ಪದವಿ ಕೊಟ್ಟು ಪುರಸ್ಕರಿಸಿತು. ಈ ಪದವಿ ಅವರಿಗೆ ಸಂದದ್ದು ಭೌತವಿಜ್ಞಾನದಲ್ಲಿಯ ಸಂಶೋಧನೆಗಳಿಗಾಗಿಯೇ ಎಂಬುದನ್ನು ಗಮನಿಸಬೇಕು. ಅವರು ತಮ್ಮ ಸಂಶೋಧನೆಗಳಿಂದ ವಾಣಿಜ್ಯಿಕ ಲಾಭ ಮಾಡಿಕೊಳ್ಳುವುದರ ಬದಲು ತಾವು ಕಂಡುಹಿಡಿದುದನ್ನು ಉಳಿದವರು ಅಭಿವೃದ್ಧಿಪಡಿಸಲಿ ಎಂಬ ಮಹಾನ್ ಮನೋಧರ್ಮವನ್ನು ಬಹಿರಂಗಪಡಿಸಿದರು. ನಂತರದಲ್ಲಿ, ಅವರು ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದಂತೆ ಹೊಸ ದಾರಿ ತೋರುವ ಹಲವಾರು ಸಂಶೋಧನೆಗಳನ್ನು ಮಾಡಿದರು. ಸಸ್ಯಗಳು ಪ್ರಚೋದನೆಗೆ ತೋರುವ ಪ್ರತಿಕ್ರಿಯೆಯನ್ನು ಅಳೆಯುವ ಸಾಧನವನ್ನು ತಯಾರುಮಾಡಿ ಪ್ರಾಣಿ ಮತ್ತು ಸಸ್ಯ ಅಂಗಾಂಶಗಳಲ್ಲಿನ ಸಾಮ್ಯತೆಯನ್ನು ವೈಜ್ಞಾನಿಕವಾಗಿ ಸಾಧಿಸಿ ತೋರಿಸಿದರು. ಬೋಸರು ನವನವೀನ ಉಪಕರಣಗಳನ್ನು ಸಂಶೋಧಿಸಿ ಬಳಸುವುದರಲ್ಲಿ ಸಿದ್ಧಹಸ್ತರು. ಭೌತವಿಜ್ಞಾನದಲ್ಲಿಯ ಪ್ರಾರಂಭಿಕ ಪ್ರಯೋಗಗಳಿಗೆ ಅವರಿಗೆ ಬೇಕಾಗಿದ್ದ ವಿದ್ಯುತ್ ತರಂಗಗಳನ್ನು ಉತ್ಪಾದಿಸಲು ಎಲೆಕ್ಟ್ರಿಕ್ ರೇಡಿಯೇಟಿವ್ ಎಂಬ ಉಪಕರಣ ನಿರ್ಮಿಸಿದರು. ಅದು 25ರಿಂದ 5 ಮಿಲಿ ಮೀಟಿರುಗಳಷ್ಟು ಹ್ರಸ್ವತರಂಗಗಳನ್ನು ವಿಕಿರಣಗೊಳಿಸುತ್ತಿತ್ತು. ಈ ತರಂಗಗಳ ಪ್ರಕಾಶಸದೃಶ ಭೌತಗುಣಧರ್ಮಗಳನ್ನೆಲ್ಲ ಅವರು ಸಂಪೂರ್ಣವಾಗಿ ಅಭ್ಯಸಿಸಿದರು. ಲಂಡನ್ನಿನ ರಾಯಲ್ ಸೊಸೈಟಿಯಲ್ಲಿ ಉಪನ್ಯಾಸಮಾಡಲು ಮೊದಲನೆಯ ಸಲ ಅಹ್ವಾನಿತರಾದಾಗ (1897) ತಾವು ಕಲಕತ್ತೆಯಲ್ಲಿ ನಿರ್ಮಿಸಿದ್ದ ಪ್ರೇಷಕ ಅಭಿಗ್ರಾಹಕಗಳೆರಡೂ ಇದ್ದ ಒಂದು ಉಪಕರಣವನ್ನು ಅಲ್ಲಿ ಪ್ರದರ್ಶಿಸಿದರು. ಅವರ ವಿದ್ಯುತ್ ತರಂಗಗಳ ಉಪಕರಣಗಳು ಹ್ರಸ್ವತರಂಗಗಳ ರೋಹಿತ ಮಾಪಕಗಳನ್ನು ಒಳಗೊಂಡಿದ್ದುವು. ಆದೇ ಕಾಲಕ್ಕೆ ಅವರು ಯಾಂತ್ರಿಕ ಅಥವಾ ಸೂಕ್ಷ್ಮ ಪ್ರಚೋದನೆಗಳು ವಿದ್ಯುತ್ ಪ್ರತಿಕ್ರಿಯೆಗಳನ್ನು ಪ್ರದರ್ಶಿಸಬಲ್ಲ ತಂತ್ರವನ್ನು ಶೋಧಿಸಿದರು. ಬಹುಶಃ ಅವುಗಳ ಸೂಕ್ಷ್ಮ ಸಂವೇದಿತ್ವವೇ ಬೋಸರನ್ನು ಜೀವಜಗತ್ತಿನಲ್ಲಿಯ ಸೂಕ್ಷ್ಮ ಪ್ರತಿಕ್ರಿಯೆಗಳನ್ನು ನಿಖರವಾಗಿ ಅಳೆಯುವಂತ ಪ್ರೇರಿಸಿರಬೇಕು. ಅವರು ರಚಿಸಿದ್ದ ಕ್ರಿಸ್ಕೊಗ್ರಾಫ್ ಎಂಬ ಉಪಕರಣ ಇದಕ್ಕೆ ಉದಾಹರಣೆ. ಸಸ್ಯಗಳಲ್ಲಿ ನಡೆಯುವ ಸಂಕೋಚನ ವಿಕಸನಗಳನ್ನು ಅಳೆಯುವ ಸ್ಪೈಗ್ಮೊಗ್ರಾಫ್ ಯಂತ್ರವನ್ನು ಕೂಡ ಇಲ್ಲಿ ಉದಾಹರಿಸಬಹುದು. ಹತ್ತೊಂಬತ್ತನೆಯ ಶತಮಾನದ ಕೊನೆಯ ವರ್ಷ ಬೋಸರ ಸಂಶೋಧನ ಕ್ಷೇತ್ರವನ್ನು ಭೌತವಿಜ್ಞಾನದಿಂದ ಜೀವವಿಜ್ಞಾನಕ್ಕೆ ಬದಲಿಸಿತು. ಇವರಾಗ ವಿಶೇಷತಃ ಸಸ್ಯವಿಜ್ಞಾನದಲ್ಲಿ ಭೌತವೈಜ್ಞಾನಿಕಮಾಪನ ಪದ್ಧತಿಗಳನ್ನು ಪ್ರಯೋಗಿಸಲು ತೊಡಗಿದರು. ಭೌತವಿಜ್ಞಾನಿಯೊಬ್ಬ ಹೀಗೆ ಅನ್ಯಕ್ಷೇತ್ರದಲ್ಲಿ ಕಾಲಿಟ್ಟಾಗ ಅಲ್ಲಿಯ ವಿಜ್ಞಾನಿಗಳು ಇವರನ್ನು ಮುಕ್ತ ಹೃದಯದಿಂದ ಸ್ವಾಗತಿಸದೆ ಇದ್ದದ್ದು ಅಸಹಜವಲ್ಲ. ಇದನ್ನು ಪರಿಗಣಿಸದೆ ಅವರು ಸಸ್ಯ ಕ್ಷೇತ್ರದಲ್ಲಿಯೇ ದೃಢವಾಗಿ ಬೇರೂರಿ ತಮ್ಮ ಅಪ್ರತಿಮ ಸಂಶೋಧನಾ ಸಾಮರ್ಥ್ಯವನ್ನು ಅಲ್ಲಿಯೇ ಪ್ರದರ್ಶಿದರು. ನಿರ್ಜೀವ ವಸ್ತುಗಳೂ ಜೀವಿಗಳೂ ವಿದ್ಯುತ್ ಪ್ರೇರಣೆಗೆ ಒಳಗಾದಾಗ ಒಂದೇ ರೀತೀಯ ಪ್ರತಿಕ್ರಿಯೆಗಳನ್ನು ಪ್ರದರ್ಶಿಸುತ್ತವೆ. ಚಿಂತೆ, ಬಳಲಿಕೆ, ನೆನಪು ಮೊದಲಾದ ವಿಷಯಗಳಲ್ಲಿ ಸತುವು ಕೂಡ ಜೀವವಿದ್ದಂತೆಯೇ ವರ್ತಿಸಿದ್ದನ್ನು ತೋರಿಸಿ ಅವರು ವಿಜ್ಞಾನಿಗಳನ್ನು ಬೆರಗುಗೊಳಿಸಿದರು. ಪ್ರಾಣಿ ಸಸ್ಯಗಳ ಜೈವಿಕ ಚಟುವಟಿಕೆಗಳಲ್ಲಿರುವ ಅಸಮತೆ ನಮಗೆ ಗೊತ್ತು. ಆಘಾತಕ್ಕೆ ಈಡಾದಾಗ ಪ್ರಾಣಿಗಳು ಚಲನೆಯಿಂದ ಪ್ರತಿಕ್ರಿಯೆ ತೋರಿಸುತ್ತವೆ. ಅವುಗಳಲ್ಲಿರುವ ನರಮಂಡಲಗಳು ಈ ಪ್ರತಿಕ್ರಿಯೆಗಳಿಗೆ ಕಾರಣ. ಇವನ್ನು ವಿದ್ಯುತ್ ಸ್ಪಂದನಗಳಾಗಿ ಪರಿವರ್ತಿಸಿ ಅಳೆಯಬಹುದು. ಸಸ್ಯ ಜಗತ್ತಿನಲ್ಲಿಯೂ ಇದೇ ರೀತಿ ಪ್ರತಿಕ್ರಿಯಾ ವ್ಯವಸ್ಥೆ ಇದೆಯೇ ಹೇಗೆಂದು ಪರೀಕ್ಷಿಸಲು ಬೋಸರು ನೂರಾರು ಪ್ರಯೋಗಗಳನ್ನು ಮಾಡಿದರು. ಪ್ರಾಣಿಗಳಿಗೆ ಮಾತ್ರ ಇರಬಹುದೆಂದು ತಿಳಿದಿರುವ ವಿಶೇಷ ಪ್ರತಿಕ್ರಿಯೆಗಳೆಲ್ಲ ಗಿಡಗಂಟಿಗಳಿಗೂ ಇವೆಯೆಂದು ಅವರು ಪ್ರಥಮ ಬಾರಿಗೆ ಸಾಧಿಸಿದರು. ಉದಾಹರಣೆಗೆ ಒಂದು ಗಿಡಕ್ಕೆ ಹೊಡೆದಾಗ ಅದು ಪ್ರತಿಕ್ರಿಯೆ ತೋರಿಸಲು ಎಷ್ಟು ಅವಧಿ ತೆಗೆದುಕೊಳ್ಳಬಹುದು? ಸಾಮಾನ್ಯ ಸ್ಥಿತಿಯಲ್ಲಿ ಈ ಅವಧಿ 1/600 ಸೆಕೆಂಡಿನಷ್ಟು ಅಲ್ಪವೆಂದು ಅಳೆದರು. ಅದೇ ರೀತಿ ಆ ಸಸ್ಯ ದಣಿದಾಗ ಈ ಕಾಲಾವಧಿ ಹೆಚ್ಚಾಗಬಹುದೆಂದು ಗೊತ್ತಾಯಿತು. ಬಲವಾದ ಆಘಾತ ಬಡಿದರೆ ಗಿಡಗಳು ಕೂಡ ಮಂಕಾದವರಂತೆ ವರ್ತಿಸುತ್ತವೆ. ಈ ಪ್ರತಿಕ್ರಿಯಾವಧಿ ಋತುಮಾನವನ್ನು ಅವಲಂಬಿಸಿರುವುದು. ಸಸ್ಯಗಳು ಕೂಡ ವಿಷ ಪದಾರ್ಥಗಳನ್ನು ಊಡಿದಾಗ ಕುಂದುತ್ತವೆ ಮತ್ತು ಅವನ್ನು ನಿವಾರಿಸಿದಾಗ ಚೇತರಿಸಿಕೊಳ್ಳುತ್ತವೆ: ಮತ್ತೇರಿಸುವ ಪದಾರ್ಥಗಳನ್ನು ಉಣಿಸಿದಾಗ ಅವು ಪ್ರಾಣಿಗಳಂತೆಯೇ ಅಮಲೇರಿ ವರ್ತಿಸುತ್ತವೆ; ಸಸ್ಯಗಳೂ ರಾತ್ರಿ ನಿದ್ರಿಸಿ ಮುಂಜಾನೆ ಎಚ್ಚರವಾಗುತ್ತದೆ ಎಂದು ಮುಂತಾಗಿ ಬೋಸರು ತೋರಿಸಿದರು. ಮುಟ್ಟಿದರೆ ಮುನಿ ಅಥವಾ ನಾಚಿಕೆ ಮುಳ್ಳು ಸಸ್ಯದ ಒಂದು ತುದಿ ಮುಟ್ಟಿದರೆ ಅದರ ಎಲ್ಲ ಎಲೆಗಳೂ ಮುದುಡಿಕೊಳ್ಳುವ ಪ್ರತಿಕ್ರಿಯೆ ಎಲ್ಲರಿಗೂ ಗೊತ್ತು. ಇದು ಉಳಿದ ಪ್ರತಿಕ್ರಿಯೆಗಳಿಂದ ಈ ಸಸ್ಯದಲ್ಲಿ  ತೀವ್ರವಾಗಿರುವುದರಿಂದ ಯಾವುದೇ ಉಪಕರಣದ ಸಹಾಯವಿಲ್ಲದೇ ಇಂಥ ಪ್ರತಿಕ್ರಿಯೆಯನ್ನು ಗುರುತಿಸಬಲ್ಲವು. ಉಳಿದ ಸಸ್ಯಗಳಲ್ಲಿ ಕೂಡ ಸಂಭವಿಸುವ ಈ ತೆರನಾದ ಪ್ರತಿಕ್ರಿಯೆಗಳನ್ನು ಗುರುತಿಸಲು ಬೋಸರು ನಿರ್ಮಿಸಿರುವ ವಿವಿಧ ಉಪಕರಣಗಳ ಸಹಾಯಬೇಕು. ಸಸ್ಯಗಳಲ್ಲಿಯೂ ಪ್ರತಿಕ್ರಿಯೆಗಳನ್ನು ಸಾಗಿಸಲು ವಿಶಿಷ್ಟ ನರಗಳಿವೆ. ಅವು ಕೂಡ ನೋವು ನಲಿವುಗಳನ್ನು ಪ್ರಾಣಿಗಳಂತೆಯೆ ಅನುಭವಿಸುತ್ತವೆ. ಹೀಗೆ ಸಸ್ಯಜಗತ್ತಿಗೂ ಪ್ರಾಣಿ ಜಗತ್ತಿಗೂ ಹೋಲಿಕೆ ಮತ್ತು ಏಕತೆ ಇರುವುದನ್ನು ಬೋಸರು ಸಿದ್ಧಪಡಿಸಿ ಜೀವ ಭೌತವಿಜ್ಞಾನದಲ್ಲಿ ಹೊಸ ಕ್ರಾಂತಿ ಉಂಟುಮಾಡಿದರು. ಬೋಸರು ಭೌತವಿಜ್ಞಾನ ಕ್ಷೇತ್ರ ಬಿಟ್ಟು ಜೀವವಿಜ್ಞಾನ ಕ್ಷೇತ್ರ ಪ್ರವೇಶಿಸಿದಾಗ ಸಾಕಷ್ಟು ವಿರೋಧ ಎದುರಿಸಬೇಕಾಯಿತು. ಅವರ ಪ್ರಾರಂಭಿಕ ಹೋರಾಟ ಕೂಡ ರೋಮಾಂಚಕಾರಿಯಾಗಿದೆ. 1897ರಲ್ಲಿ ಅವರು ರಾಯಲ್ ಸೊಸೈಟಿಯಲ್ಲಿ ನೀಡಿದ ಶುಕ್ರವಾರ ಸಂಜೆ ಉಪನ್ಯಾಸ ಎಲ್ಲರಿಂದಲೂ ಮೆಚ್ಚುಗೆ ಪಡೆಯಿತು. ಆದರೆ ಸಸ್ಯ ಮತ್ತು ಪ್ರಾಣಿಗಳ ಪ್ರತಿಕ್ರಿಯೆಗಳ ಏಕರೂಪಕ್ಕೆ ಸಿದ್ಧಪಡಿಸಿದ ಅವರ ಎರಡನೆಯ ಉಪನ್ಯಾಸ (1901) ಮಿಶ್ರ ಪ್ರತಿಕ್ರಿಯೆಗೆ ಒಳಗಾಯಿತು. ಆಗ ವೈದ್ಯುತಶರೀರ ಕ್ರಿಯಾವಿಜ್ಞಾನದ ಅಧ್ಯಯನದಲ್ಲಿ ಜಾನ್ ಸ್ಯಾಂಡರ್‌ಸನ್ ಎಂಬ ವಿಜ್ಞಾನಿಯ ನಿರ್ಣಯವೇ ವೇದಾವಾಕ್ಯವೆನಿಸುತ್ತಿತ್ತು. ಬೋಸರ ಉಪನ್ಯಾಸ ಕೇಳಲೆಂದೇ ಈತ ಆಕ್ಸ್‌ಫರ್ಡಿನಿಂದ ಲಂಡನ್ನಿಗೆ ಬಂದಿದ್ದ. ಇವನೂ ಇವನ ಬೆಂಬಲಿಗರೂ ಪೂರ್ವಾಗ್ರಹಪೀಡಿತರಾಗಿ ಬೋಸರ ನಿರ್ಣಯಗಳ ಋಜುತ್ವವನ್ನು ಪ್ರಶ್ನಿಸಿದರು. ಇದರಿಂದಾಗಿ ರಾಯಲ್ ಸೊಸೈಟಿ ಕೂಡ ಬೋಸರ ನಿರ್ಣಯಗಳನ್ನೂ ಪ್ರಬಂಧ ಪ್ರಕಟಣೆಯನ್ನೂ ನಿರಾಕರಿಸಿತು. ಬೋಸರಿಗೇನೂ ನಿರಾಶೆಯಾಗಲಿಲ್ಲ. ಅದೊಂದು ವಿಜ್ಞಾನ ವರ್ಣಾಶ್ರಮದ ಹೇಯ ಪ್ರದರ್ಶನವೆಂದು ಅವರಿಗೆ ಗೊತ್ತಿತ್ತು. ರಾಯಲ್ ಸೊಸ್ಶೆಟಿಯಲ್ಲಿ ಈ ವಿವಾದಾತ್ಮಕ  ಉಪನ್ಯಾಸ ಕೇಳಿದ್ದ ಕೆಲವು ಪ್ರಮುಖ ಜೀವವಿಜ್ಞಾನಿಗಳು ಆಗ ಬೋಸರಿಗೆ ಬೆಂಬಲವಾಗಿ ನಿಂತರು. ಆಕ್ಸ್‌ಫರ್ಡಿನ ಪ್ರಾಧ್ಯಾಪಕ ವೈನ್ಸ್ ಎಂಬ ಸಸ್ಯವಿಜ್ಞಾನಿ ವಿಶೇಷ ಆಸ್ಥೆ ತೋರಿಸಿ ಈ ಪ್ರಬಂಧವನ್ನು ಪ್ರಕಟಿಸಲು ಮುಂದೆ ಬಂದ. ಇದೇ ಸುಮಾರಿಗೆ ಬೋಸರ ಸಂಶೋಧನೆಯ ಚೌರ್ಯ ಮಾಡಿ ಪ್ರಕಟಿಸುವ ಪ್ರಯತ್ನಗಳೂ ನಡೆದವು. ತಮ್ಮ ಸಂಶೋಧನ ನಿರ್ಣಯಗಳು ಬೇರಾರದೂ ಅಲ್ಲವೆಂದು ಸಿದ್ಧಪಡಿಸಲು ಅವರು ಒಂದು ವಿಚಾರಣಸಮಿತಿಯ ಮುಂದೆ ಬರಬೇಕಾಯಿತು. ಇವರ ಮನಸ್ಸಿಗೆ ಈ ಎಲ್ಲಾ ಘಟನೆಗಳು ನೋವು ಉಂಟುಮಾಡಿದವು. ಕೊನೆಗೆ ವಿಚಾರಣ ಸಮಿತಿಯು ಈ ಸಂಶೋಧನೆಗಳ ಮೂಲ ಕರ್ತೃ ಸಾಕ್ಷಾತ್ ಬೋಸರೇ ಎಂದು ನಿರ್ಣಯವಿತ್ತಿತ್ತು. ಅಂದಿನಿಂದ ಇವರಿಗೆ ಏಕಪ್ರಕಾರವಾಗಿ ವಿವಾದಾತೀತ ಮನ್ನಣೆ ದೊರಕಿ ಇವರ ವೈಜ್ಞಾನಿಕ ಪ್ರತಿಷ್ಠೆ ಜೀವವಿಜ್ಞಾನ ಕ್ಷೇತ್ರದಲ್ಲೂ ಭದ್ರವಾಯಿತು. ತಮ್ಮ ಸಂಶೋಧನೆಗಳನ್ನು ಸಾದರಪಡಿಸಿ ಉಪನ್ಯಾಸಗಳನ್ನು ನೀಡಲು ಬೋಸರಿಗೆ ಮೂರು ಬಾರಿ ರಾಯಲ್ ಸೊಸೈಟಿ ಆಹ್ವಾನಿಸಿದ್ದನ್ನು  ಗಮನಿಸಿದರೆ ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ರೇಷ್ಠತಮ ವಿಜ್ಞಾನಿಗಿರಬೇಕಾದ ಗೌರವ ಸ್ಥಾನವಿದ್ದಿತೆಂಬುದು ಸ್ಪಷ್ಟವಾಗುತ್ತದೆ. ಪ್ರಪಂಚದ ವಿವಿಧ ವಿಶ್ವವಿದ್ಯಾಲಯಗಳೂ ವಿಜ್ಞಾನ ಸಂಸ್ಥೆಗಳೂ ಅವರನ್ನೂ ಆಮಂತ್ರಿಸಿ ಗೌರವಿಸಲು ಪೈಪೋಟಿ ನಡೆಸುವಂಥ ಪರಿಸ್ಥಿತಿ ಏರ್ಪಟ್ಟಿತ್ತು. ಅವರು 1900ರಲ್ಲಿ ಪ್ಯಾರಿಸ್‌ಗೆ ಮತ್ತು 1915ರಲ್ಲಿ ಇಂಗ್ಲೆಂಡಿನ ಪ್ರವಾಸದೊಂದಿಗೆ ಅಮೆರಿಕೆಯನ್ನೂ ಒಳಗೊಂಡಂತೆ ಪ್ರಪಂಚದ ಬೇರೆ ಬೇರೆ ವಿಜ್ಞಾನಸಂಸ್ಥೆಗಳಿಗೆ ಮತ್ತು ವಿಶ್ವವಿದ್ಯಾಲಯಗಳಿಗೆ ಭೇಟಿಕೊಟ್ಟು ಉಪನ್ಯಾಸಗಳನ್ನು ಮಾಡಿದರು. ಆಮೇಲೆ ಕೂಡ ಅವರು ಹಲವಾರು ಪ್ರಪಂಚ ಪರ್ಯಟನೆ ಕೈಗೊಂಡರು. ಬೋಸರಿಗೆ ಪದವಿ ಪ್ರಶಸ್ತಿಗಳು ವಿಪುಲವಾಗಿ ದೊರೆತುವು. ಕಲಕತ್ತಾ ವಿಶ್ವ ವಿದ್ಯಾಲಯ ಡಾಕ್ಟರ್ ಆಫ್ ಸೈನ್ಸ್ ಪದವಿ ನೀಡಿತು. ಆಗಿನ ಭಾರತ ಸರ್ಕಾರ 1903ರಲ್ಲಿ ಸಿ.ಐ.ಇ. ಬಿರುದನ್ನೂ 1911ರಲ್ಲಿ ಸಿ.ಎಸ್.ಐ. ಬಿರುದನ್ನೂ ಪ್ರದಾನಿಸಿತು. 1916ರಲ್ಲಿ ಬ್ರಿಟಿಷ್ ಸರ್ಕಾರ ನೈಟ್ ಬಿರುದನ್ನು (ಸರ್) ನೀಡಿ ಗೌರವಿಸಿತು. 1920ರಲ್ಲಿ ಇವರು ರಾಯಲ್ ಸೊಸ್ಶೆಟಿಯ ಸದಸ್ಯರಾಗಿ (ಎಫ್.ಆರ್.ಎಸ್.)  ಚುನಾಯಿತರಾದರು. ಭಾರತದಲ್ಲಿ ಹಿಂದೊಮ್ಮೆ ನಲಂದಾ ಮತ್ತು ತಕ್ಷಶಿಲಾ ವಿಶ್ವವಿದ್ಯಾಲಯಗಳಿದ್ದಂತೆ ಪೂರ್ತಿ ವಿಜ್ಞಾನ ಸಂಶೋಧನೆಗೆ ಮೀಸಲಾದ ಒಂದು ಸಂಸ್ಥೆ ಕಟ್ಟಬೇಕೆಂದು ಬೋಸರು ಕನಸು ಕಾಣುತ್ತಿದ್ದರು. 1917 ನವೆಂಬರ್ 30ರಂದು ಕಲಕತ್ತೆಯಲ್ಲಿ ಬೋಸ್ ಸಂಶೋಧನಸಂಸ್ಥೆ ಪ್ರಾಂಭವಾದಾಗ ಇದು ನನಸಾಯಿತು. ಬೋಸ್ ಇದನ್ನು ದೇಶಕ್ಕೆ ಅರ್ಪಿಸಿ ಜಾತಿ, ಭಾಷೆ, ಲಿಂಗ ಭೇದವಿಲ್ಲದೆ ಎಲ್ಲರೂ ಇದರಲ್ಲಿ ಸಂಶೋಧನಕಾರ್ಯ ನಡೆಸಲೆಂದು ಹಾರೈಸಿದರು. ಇವರು ಆಗಾಗ ತಮ್ಮ ಸಂಸ್ಥೆಯಲ್ಲಿ ಪ್ರಬುದ್ಧ ಉಪನ್ಯಾಸಗಳನ್ನು ಮಾಡುತ್ತಿದ್ದರು. ಅವರು ಸಾರ್ವಜನಿಕವಾಗಿ ಮಾಡುತ್ತಿದ್ದ ಉಪನ್ಯಾಸಗಳಲ್ಲಿ ಅವರ ರಾಷ್ಟ್ರ ಪ್ರೇಮ, ಸಾಹಿತ್ಯಾಸಕ್ತಿ ಮತ್ತು ಸಾಂಸ್ಕೃತಿಕ ಅಭಿರುಚಿ ಗೋಚರವಾಗುತ್ತವೆ. ಅವರ 70ನೆಯ ವರ್ಧಂತ್ಯುತ್ಸವದಲ್ಲಿ ಪ್ರಪಂಚದ  ಮೂಲೆ ಮೂಲೆಗಳಿಂದ ಅಭಿನಂದನ ಸಂದೇಶಗಳು ಬಂದುವು. ವಿಜ್ಞಾನಿಗಳಷ್ಟೇ ಅಲ್ಲದೆ ರವೀಂದ್ರನಾಥ ಟಾಗೋರರೂ ಜಾರ್ಜ್ ಬರ್ನಾರ್ಡ್ ಷಾ ಮೊದಲಾದ  ಜಗತ್ಪ್ರಸಿದ್ಧ ಸಾಹಿತಿಗಳೂ ಅನೇಕ ರಾಜಕಾರಣಿಗಳೂ ಸಂದೇಶಗಳನ್ನು ಕಳಿಸಿದವರಲ್ಲಿ ಸೇರಿದ್ದರು. ಬೋಸರು ಪ್ರಥಮ ದರ್ಜೆಯ ಸಾಹಿತಿಯೂ ಆಗಿದ್ದರು. ಬಂಗಾಲಿ ಭಾಷೆಯಲ್ಲಿ ಲೇಖನಗಳನ್ನೂ ಪತ್ರಗಳನ್ನೂ ಬರೆಯುತ್ತಿದ್ದರು. 1911ರಲ್ಲಿ ವಂಗ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಪಟ್ಟ ಇವರದಾಯಿತು. ಅದು ಆ ನಾಡಿನ ಯಾವುದೇ ಸಾಹಿತಿಗೆ ದೊರಕಬಹುದಾದ ಅತ್ಯುಚ್ಚ ಮನ್ನಣೆಯಾಗಿತ್ತು. ಅಧ್ಯಕ್ಷ ಭಾಷಣಕ್ಕೆ ವಿಜ್ಞಾನದಲ್ಲಿ ಸಾಹಿತ್ಯ ಎಂಬ ವಿಷಯ ಆಯ್ದುಕೊಂಡು ಎರಡೂ ಕ್ಷೇತ್ರಗಳ ನಡುವಿನ ಸಂಬಂಧ ತಿಳಿಸಿದರು. ಜಗದೀಶಚಂದ್ರ ಬೋಸರು ಖ್ಯಾತಿ ಶಿಖರದ ತುತ್ತ ತುದಿಗೇರಿದ ಐತಿಹಾಸಿಕ ಸೀಮಾಪುರುಷರಲ್ಲಿ ಒಬ್ಬರಾದರು. ಕೊನೆಯ ದಿನಗಳಲ್ಲಿ ಆರೋಗ್ಯ ಸುಧಾರಣೆಗಾಗಿ ಡಾರ್ಜಿಲಿಂಗಿಗೆ ಹೋಗಿದ್ದರು. 1937 ನವೆಂಬರ್ 30ರಂದು 80ನೆಯ ವರ್ಷದಲ್ಲಿ ಅಲ್ಲಿಯೇ ಅನಾರೋಗ್ಯದಿಂದ ತೀರಿಕೊಂಡರು. ಹಿತೈಷಿಗಳ ಒತ್ತಡಕ್ಕೆ ಮಣಿದು ತಮ್ಮ ಸಂಶೋಧನೆಗಳಲ್ಲಿ ಒಂದಕ್ಕೆ ಅವರು ಪೇಟೇಂಟ್‍ಗಾಗಿ ಅರ್ಜಿ ಸಲ್ಲಿಸಿದರಾದರೂ ಯಾವುದೇ ಬಗೆಯ ಪೇಟೆಂಟ್ ಪಡೆಯುವುದರಲ್ಲಿ ಅವರಿಗೆ ಯಾವುದೇ ಆಸಕ್ತಿ ಇರಲಿಲ್ಲ ಎಂಬುದನ್ನು ವಿಶ್ವವೇ ಬಲ್ಲಂತ ಸಂಗತಿಯಾಗಿದೆ. “ನಾನೇನೂ ಸೃಷ್ಟಿಕರ್ತನಲ್ಲ. ಈ ಜಗದಲ್ಲಿ ಅಂತರ್ಗತವಾಗಿರುವ ಕೆಲವೊಂದು ವಸ್ತುವಿಶೇಷಗಳು ನನ್ನ ಮೂಲಕ ಜಗತ್ತಿಗೆ ಕಾಣಿಸಿಕೊಂಡಿವೆ. ಹಾಗಾಗಿ ಜ್ಞಾನ ಯಾರ ಸ್ವತ್ತೂ ಅಲ್ಲ. ಅದನ್ನು ಎಲ್ಲರೂ ಮುಕ್ತವಾಗಿ ಹಂಚಿಕೊಳ್ಳಬೇಕು” ಎಂಬುದು ಅವರ ಹೃದಯ ವೈಶಾಲ್ಯ ವಿಚಾರಧಾರೆಯಾಗಿತ್ತು. ಅವರು ತೀರಿಕೊಂಡ ಹಲವಾರು ವರುಷಗಳ ನಂತರ ಅವರು ಆಧುನಿಕ ವಿಜ್ಞಾನಕ್ಕೆ ಸಲ್ಲಿಸಿದ ಅನೇಕ ಕೊಡುಗೆಗಳಿಗಾಗಿ ಅವರನ್ನು ಗುರುತಿಸಲಾಗುತ್ತಿದೆ. ಕೃತಿಗಳು ಬೋಸ್ ಅವರು ಕೆಲವೊಂದು ಪ್ರಮುಖ ಕೃತಿಗಳು ಇಂತಿವೆ Response in the Living and Non-living(1902), Plant response as a means of physiological investigation(೧೯೦೬), Comparative Electro-physiology: A Physico-physiological Study(೧೯೦೭), Researches on Irritability of Plants(೧೯೧೩), Physiology of the Ascent of Sap(೧೯೨೩), The physiology of photosynthesis(೧೯೨೪), The Nervous Mechanisms of Plants(೧೯೨೬), Plant Autographs and Their Revelations(೧೯೨೭), Growth and tropic movements of plants(೧೯೨೮), Motor mechanism of plants(೧೯೨೮) ಅಧ್ಯಾತ್ಮಿಕ - ವೈಜ್ಞಾನಿಕ ಮೇಳೈಕೆ ಬೋಸ್ ಅವರಿಗೆ ರವೀಂದ್ರನಾಥ್ ಠಾಗೂರ್ ಅವರೊಂದಿಗೆ ಆಪ್ತ ಸ್ನೇಹವಿತ್ತು. ಐನ್‍ಸ್ಟೀನ್ ಅವರೊಂದಿಗೂ ಸಂಪರ್ಕವಿತ್ತು. ಜಗದೀಶ್ ಚಂದ್ರ ಬೋಸರಲ್ಲಿ ಆಧ್ಯಾತ್ಮಿಕ - ವೈಜ್ಞಾನಿಕ ಚಿಂತನೆಗಳೆರಡೂ ಒಂದಾಗಿ ಮೇಳೈಸಿದ್ದವು ಎಂಬುದು ಪ್ರಾಜ್ಞರ ಅಭಿಮತ. ಪ್ರಶಸ್ತಿ ಗೌರವಗಳು ಬೋಸರಿಗೆ ೧೯೧೬ರಲ್ಲಿ ನೈಟ್‍ಹುಡ್ ಪ್ರಶಸ್ತಿ ಸಂದಿತು. ಬೋಸರು ೧೯೧೭ರಲ್ಲಿ ಬೋಸ್ ಅವರು ಬೋಸ್ ಇನ್ಸ್ಟಿಟ್ಯೂಟನ್ನು ಕಲ್ಕತ್ತದಲ್ಲಿ ಸ್ತಾಪಿಸಿದರು. ೧೯೨೦ರಲ್ಲಿ ಬೋಸರನ್ನು ಲಂಡನ್ನಿನ ಫೆಲೊ ಆಫ್ ರಾಯಲ್ ಸೊಸೈಟಿಯ ಸದಸ್ಯರಾಗಿ ಆಯ್ಕೆ ಮಾಡಲಾಯಿತು. ೧೯೨೭ರ ವರ್ಷದಲ್ಲಿ ಅವರು ಇಂಡಿಯನ್ ಸೈನ್ಸ್ ಕಾಂಗ್ರೆಸ್ಸಿನ ೧೪ನೇ ಅಧಿವೇಶನದ ಅಧ್ಯಕ್ಷತೆಯ ಗೌರವವನ್ನು ಪಡೆದರು. ೧೯೨೮ರ ವರ್ಷದಲ್ಲಿ ಅವರಿಗೆ ವಿಯೆನ್ನಾ ಅಕಾಡೆಮಿ ಆಫ್ ಸೈನ್ಸಸ್ ಸದಸ್ಯತ್ವ ಗೌರವ ಲಭಿಸಿತು. ೧೯೨೯ರಲ್ಲಿ ಅವರಿಗೆ ಫಿನ್ನಿಶ್ ಸೊಸೈಟಿ ಆಫ್ ಸೈನ್ಸನ್ ಅಂಡ್ ಲೆಟರ್ಸ್ ಸದಸ್ಯತ್ವ ಗೌರವ ಸಂದಿತು. ಅವರಿಗೆ ಲೀಗ್ ಆಫ್ ನೇಶನ್ಸ್ ಕಮಿಟಿ ಆಫ್ ಇಂಟಲೆಕ್ಚುಯಲ್ ಕೋಪರೇಶನ್ ಸದಸ್ಯತ್ವ ಗೌರವವವೂ ಸಂದಿತು. ಬೋಸ್ ಅವರನ್ನು ಪ್ರಸಕ್ತದಲ್ಲಿ ಇಂಡಿಯನ್ ನ್ಯಾಷನಲ್ ಸೈನ್ಸ್ ಅಕಾಡೆಮಿ ಎಂದಾಗಿರುವ ಅಂದಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸಸ್ ಇಂಡಿಯಾದ ಸಂಸ್ಥಾಪಕ ಫೆಲೋ ಎಂದು ಗೌರವಿಸಲಾಗಿತ್ತು. ದಿ ಇಂಡಿಯನ್ ಬೊಟಾನಿಕ್ ಗಾರ್ಡನ್ ಅನ್ನು ಜೂನ್ ೨೫, ೨೦೦೯ರ ವರ್ಷದಂದು ಆಚಾರ್ಯ ಜಗದೀಶ್ ಚಂದ್ರ ಬೋಸ್ ಇಂಡಿಯನ್ ಬೊಟಾನಿಕ್ ಗಾರ್ಡನ್ ಎಂದು ಹೆಸರಿಸಲಾಯಿತು. ವಿದಾಯ ನವೆಂಬರ್ ೨೩, ೧೯೩೭ರಂದು ಜಗದೀಶ್ಚಂದ್ರ ಬೋಸರು ನಿಧನರಾದರು. ಉಲ್ಲೇಖಗಳು ಆಕರಗಳು ಬೋಸ್ ಇನ್ಸ್ಟಿಟ್ಯೂಟ್ನ ಅಂತರಜಾಲ ತಾಣ ಕಲ್ಕತ್ತಾ ಅಂತರಜಾಲ ತಾಣದಲ್ಲಿ ಬೋಸರ ಕುರಿತಾದ ಪರಿಚಯ SIR JAGADISH CHANDRA BOSE: the unsung Hero of Radio Communication ರೇಡಿಯೋ ಸಂಪರ್ಕ ಕ್ಷೇತ್ರದ ಅಜ್ಞಾತ ನಾಯಕರಾದ ಜೆ. ಸಿ. ಬೋಸ್ ಹೊರಗಿನ ಕೊಂಡಿಗಳು Bose Institute website Jagadish Chandra Bose at the Encyclopædia Britannica J. C. Bose, The Unsung hero of radio communication , web.mit.edu JC Bose: 60 GHz in the 1890s Jagadish Chandra Bose at Engineering and Technology History Wiki ECIT Bose article at www.infinityfoundation.com ಈ ಲೇಖನಗಳನ್ನೂ ನೋಡಿ ಭಾರತದ ವಿಜ್ಞಾನಿಗಳು ಭಾರತದ ವಿಜ್ಞಾನಿಗಳು ಭೌತವಿಜ್ಞಾನಿಗಳು ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ
1045
https://kn.wikipedia.org/wiki/%E0%B2%9A%E0%B2%BF%E0%B2%A4%E0%B3%8D%E0%B2%B0%E0%B2%A6%E0%B3%81%E0%B2%B0%E0%B3%8D%E0%B2%97
ಚಿತ್ರದುರ್ಗ
ಚಿತ್ರದುರ್ಗ ನಗರ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಕೇಂದ್ರ ನಗರ. ಈ ನಗರವು ಕರ್ನಾಟಕ ರಾಜ್ಯದ ರಾಜಧಾನಿಯಾದ ಬೆಂಗಳೂರಿನಿಂದ ಸುಮಾರು 200ಕಿಮೀ ದೂರದಲ್ಲಿದೆ. ಹೆಸರಿನ ಮೂಲ ಚಿತ್ರದುರ್ಗ ನಗರವು ಪುರಾಣದ ಪ್ರಕಾರ ಶ್ರೀಕೃಷ್ಣ ಜಾಂಬವತಿಯ ಪುತ್ರನಾದ ಚಿತ್ರಕೇತು ಆಳ್ವಿಕೆ ಮಾಡಿದ ಪ್ರದೇಶ. ಚಿತ್ರದುರ್ಗದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಲ್ಲುಬೆಟ್ಟಗಳಿಂದ ಹಾಗೂ ಹುಲ್ಲುಗಾವಲು ಗಳಿಂದ ಕೂಡಿದ ದುರ್ಗಮ ಪ್ರದೇಶವಾಗಿತ್ತು. ಅಂತಹ ದುರ್ಗಮ ಪ್ರದೇಶವನ್ನು ಚಿತ್ರಕೇತು ಆಳ್ವಿಕೆ ಮಾಡಿದ ಕಾರಣದಿಂದ ಚಿತ್ರದುರ್ಗ ಎಂದು ಹೆಸರು ಬರಲು ಕಾರಣವಾಗಿದೆ. ಬ್ರಿಟೀಷರ ಕಾಲದಲ್ಲಿ ಚಿತ್ತಲ್‍ದ್ರಗ್ ಅಧಿಕೃತ ಹೆಸರಾಗಿತ್ತು. ಇದ್ದರಿಂದ ಚಿತ್ರದುಗ೯ ಎಂದು ಕರೆಯುತ್ತಾರೆ ಇಲ್ಲಿ ಕಲ್ಲಿನ ಕೋಟೆ ಇದೆ ಜನಸಂಖ್ಯಾ ವಿವರ ೨೦೧೧ರ ಜನಗಣತಿಯ ಪ್ರಕಾರ, ಚಿತ್ರದುರ್ಗ ನಗರದ ಜನಸಂಖ್ಯೆ ೧,೨೫,೧೭೦. ಇವರಲ್ಲಿ ಪುರಷರು ಸುಮಾರು ೫೧% ರಷ್ಟು ಇದ್ದರೆ, ಮಹಿಳೆಯರು ಸುಮಾರು ೪೯% ರಷ್ಟು ಇದ್ದಾರೆ. ಚಿತ್ರದುರ್ಗದ ಸರಾಸರಿ ಸಕ್ಷಾರತಾ ಪ್ರಮಾಣ ೭೯%, ರಾಷ್ಟ್ರೀಯ ಸರಾಸರಿಗಿಂತೆ(೫೯.೫%) ಹೆಚ್ಚಾಗಿದೆ. ಪುರುಷರ ಸಕ್ಷಾರತಾ ಪ್ರಮಾಣ ೮೦% ಮತ್ತು ಮಹಿಳೆಯರ ಸಕ್ಷಾರತಾ ಪ್ರಮಾಣ ೭೨%. ಚಿತ್ರದುರ್ಗದಲ್ಲಿ ಸುಮಾರು ೧೧% ರಷ್ಟು ಜನರು ೬ವರ್ಷಕ್ಕಿಂತ ಕಡಿಮೆ ವಯಸ್ಸಿನವರಿದ್ದಾರೆ. ಆಡಳಿತ ಚಿತ್ರದುರ್ಗ ನಗರದ ಆಡಳಿತವನ್ನು "ಚಿತ್ರದುರ್ಗ ನಗರ ಮುನ್ಸಿಪಲ್ ಕೌನ್ಸಿಲ್" ನೆಡೆಸುತ್ತದೆ. ಐತಿಹಾಸಿಕ ಸ್ಥಳಗಳು ಚಿತ್ರದುರ್ಗ ಕೋಟೆ ರಾಷ್ಟ್ರಕೂಟರು, ಚಾಲುಕ್ಯರು, ಹೊಯ್ಸಳರು ಮತ್ತು ಚಿತ್ರದುರ್ಗದ ನಾಯಕರು ಸೇರಿದ ಹಲವು ರಾಜರು ಚಿತ್ರದುರ್ಗ ಕೋಟೆಯನ್ನು ಸುಮಾರು ೧೦ರಿಂದ ೧೮ನೇ ಶತಮಾನದವರೆಗೆ ಕಟ್ಟಿದರು. ಚಂದ್ರವಳ್ಳಿ ಗುಹೆಗಳು ಚತ್ರದುರ್ಗ, ಚೋಲಗುಡ್ಡ ಮತ್ತು ಕಿರುಬನಕಲ್ಲು ಗುಡ್ಡಗಳ ನಡುವೆ ಚಂದ್ರವಳ್ಳಿ ಗುಹೆಗಳಿವೆ. ನಾಯಕನಹಟ್ಟಿಯ ತಿಪ್ಪೇರುದ್ರಸ್ವಾಮಿ ದೇವಾಲಯ. JOGIMATTI ಅಶೋಕ ಸಿದ್ದಾಪುರ : ಅಶೋಕ ಸಿದ್ದಾಪುರ ಚಿತ್ರದುರ್ಗ ಜಿಲ್ಲೆಯ ಒಂದು ಪ್ರಮುಖ ಪುರಾತತ್ವ ಸ್ಥಳವಾಗಿದ್ದು, ಅಲ್ಲಿಂದ ಅಶೋಕ ಚಕ್ರವರ್ತಿಯ ಶಾಸನಗಳನ್ನು ಉತ್ಖನನ ಮಾಡಲಾಗಿದೆ. ರಾಮಾಯಣದಲ್ಲಿ ಉಲ್ಲೇಖಿಸಲಾದ ರಾಮಗಿರಿ ಎಂಬ ಗುಡ್ಡಗಾಡು ಹತ್ತಿರದಲ್ಲಿದೆ. ರಾವಣನು ಸೀತೆಯನ್ನು ಅಪಹರಿಸಿ ಮತ್ತೆ ಲಂಕಾಕ್ಕೆ ಪ್ರಯಾಣಿಸುತ್ತಿದ್ದಾಗ, ಪೌರಾಣಿಕ ಹದ್ದು ಜಟಾಯು ಇಲ್ಲಿ ಅವನೊಂದಿಗೆ ಹೋರಾಡಿದನೆಂದು ನಂಬಲಾಗಿದೆ. ಜಟಾಯು ಯುದ್ಧದಲ್ಲಿ ಪ್ರಾಣ ಕಳೆದುಕೊಂಡರು ಮತ್ತು ನಂತರ, ಜಟಾಯುವಿನ ಕೊನೆಯ ಆಚರಣೆಗಳನ್ನು ಪೂರ್ಣಗೊಳಿಸಿದ ನಂತರ, ರಾಮನು ಆ ಸ್ಥಳದಲ್ಲಿ ಶಿವಲಿಂಗವನ್ನು ಸ್ಥಾಪಿಸಿದನು. ರಾಮೇಶ್ವಾ ಎಂದು ಕರೆಯಲ್ಪಡುವ ದೇವಾಲಯ ಹವಾಮಾನ ಒನಕೆ ಓಬವ್ವ ಒನಕೆ ಓಬವ್ವಳ ಸಾಹಸಗಾಥೆ ಕನ್ನಡ ನಾಡಿನ ಶೌರ್ಯಗಾಥೆಗಳಲ್ಲಿ ಒಂದಾಗಿ ಜನಜನಿತವಾಗಿದೆ. ಮದಕರಿ ನಾಯಕನ ಆಳ್ವಿಕೆಯ ಕಾಲದಲ್ಲಿ, ಹೈದರ-ಅಲಿಯ ಸೈನ್ಯವು ಕೋಟೆಯನ್ನು ಸುತ್ತುವರೆದಿತ್ತು. ಒಬ್ಬ ಮಹಿಳೆಯನ್ನು ಕೋಟೆಯ ಕಿಂಡಿಯಿಂದ ಒಳ ಹೊಗುವುದನ್ನು ಕಂಡ ಹೈದರ-ಅಲಿಯು ತನ್ನ ಸೈನ್ಯವನ್ನು ಆ ಕಂಡಿಯ ಮೂಲಕ ಒಳಗೆ ಕಳುಹಿಸಿ ಕೋಟೆಯನ್ನು ವಶಪಡಿಸಿಕೊಳ್ಳಲು ಸಂಚು ಹೂಡುತ್ತಾನೆ. ಕೋಟೆಯ ಆ ಭಾಗದ (ಹೆಸರು ಗೊತ್ತಿಲ್ಲ) ನ ಹಂಡತಿಯೇ ಓಬವ್ವ. ಅವಳು ಗಂಡನಿಗೆ ಊಟ ತರುತ್ತಾಳೆ. ಗಂಡನನ್ನು ಊಟಕ್ಕೆ ಕೂರಿಸಿ, ನೀರು ತರಲು ಹೋಗುತ್ತಾಳೆ. ಅಲ್ಲಿ ಹೈದರ-ಅಲಿಯ ಸೈನಿಕರನ್ನು ಕಿಂಡಿಯ ಮೂಲಕ ನುಸುಳುವದನ್ನು ಕಾಣುತ್ತಾಳೆ. ಎದೆಗುಂದದೆ ಕೈಯಲ್ಲಿದ್ದ ಒನಕೆಯಿಂದಲೇ ಒಳಗೆ ನುಗ್ಗುತ್ತಿರುವ ಒಬ್ಬೊಬ್ಬ ಸೈನಿಕರನ್ನು ಜಜ್ಜಿ ಕೊಲ್ಲುತ್ತಾಳೆ. ಸತ್ತವರನ್ನು ಸಂಶಯ ಬಾರದ ಹಾಗೆ ದೂರ ಎಳೆದು ಹಾಕುತ್ತಾಳೆ. ಅತ್ತ ಊಟ ಮುಗಿಸಿದ ಕಾವಲುಗಾರ ತುಂಬಾ ಹೊತ್ತಿನವರೆಗೂ ಹೆಂಡತಿಗಾಗಿ ಕಾಯ್ದ ಹುಡುಕುತ್ತ ಬರುತ್ತಾನೆ. ಅಲ್ಲಿ ರಕ್ತಸಿಕ್ತವಾದ ಒನಕೆಯನ್ನು ಕೈಯಲ್ಲಿ ಹಿಡಿದು ರಣಚಂಡಿಯ ಅವತಾರದಲ್ಲಿರುವ ಓಬವ್ವನನ್ನು ಸತ್ತು ಬಿದ್ದಿರುವ ನೂರಾರು ಹೈದರ-ಅಲಿಯ ಸೈನಿಕರನ್ನು ನೋಡಿ ಆಶ್ಚರ್ಯಚಕಿತನಾಗುತ್ತಾನೆ. ಕೂಡಲೆ ಕಹಳೆ ಊದಿ ತನ್ನ ಸೇನೆಯನ್ನು ಎಚ್ಚರಗೊಳಿಸುತ್ತಾನೆ ಹಾಗೂ ನಾಯಕನ ಸೇನೆಯು ಕೋಟೆಯನ್ನು ಹೈದರ-ಅಲಿಯ ವಶಕ್ಕೆ ಹೋಗುವದನ್ನು ತಪ್ಪಿಸುತ್ತದೆ. ಓಬವ್ವನ ಸಮಯೋಚಿತ ಯುಕ್ತಿ ಮತ್ತು ಧೈರ್ಯವನ್ನು ಈಗಲೂ ಜನ ನೆನೆಯುತ್ತಾರೆ. ಈ ಘಟನೆಗೆ ಸಾಕ್ಷಿಯಾಗಿ ಈಗಲೂ ಆ ಕಿಂಡಿಯನ್ನು ಏಳು ಸುತ್ತಿನ ಕೋಟೆಯಲ್ಲಿ ಕಾಣಬಹುದು. ಅದು ಚಿತ್ರದುರ್ಗದ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ .ಮತ್ತು ಚಿತ್ರದುಗದಲ್ಲಿ ಗ್ಯಾಲರಿ ಉಲ್ಲೇಖಗಳು‌‌ ಚಿತ್ರದುರ್ಗ ಜಿಲ್ಲೆಯ ನಗರ ಮತ್ತು ಪಟ್ಟಣಗಳು
1049
https://kn.wikipedia.org/wiki/%E0%B2%B8%E0%B3%81%E0%B2%97%E0%B3%8D%E0%B2%B0%E0%B3%80%E0%B2%B5
ಸುಗ್ರೀವ
ಸುಗ್ರೀವ ರಾಮಾಯಣದಲ್ಲಿ ರಾಮನಿಗೆ ರಾವಣನನ್ನು ತಲುಪಲು ಸಹಾಯ ಮಾಡುವ ವಾನರ ರಾಜ. ಇವನ ಊರು ಪುರಾಣದಲ್ಲಿ - ಕಿಷ್ಕಿಂಧ. ಇವನು ರಾಮನ ಸಹಾಯ ಪಡೆದು ತನ್ನ ಅಣ್ಣನಾದ ವಾಲಿಯನ್ನು ಸದೆಬಡಿಯುತ್ತಾನೆ. ವಾನರ ಸೈನ್ಯವನ್ನು ಲಂಕೆಯೆಡೆಗೆ ಹೊರಡಿಸಿ ರಾಮನಿಗೊಪ್ಪಿಸಿ, ರಾಮಾಯಣದ ಯುದ್ಧದಲ್ಲಿ ಪಾಲ್ಗೊಳ್ಳುತ್ತಾನೆ. ಪುರಾಣ ವಿಜಯನಗರ[ಹ೦ಪಿ] ಸುಗ್ರೀವನ ಗುಹೆ ವಿಜಯನಗರದ ಸುಗ್ರೀವನ ಗುಹೆ ಒಂದು ಪ್ರಾಕೃತಿಕ ಗುಹೆ, ಇಲ್ಲಿಯೇ ಶ್ರೀರಾಮ ಹನುಮ೦ತನನ್ನು ಮತ್ತು ಸುಗ್ರೀವನನ್ನು ಭೇಟಿಯಾದ ಎ೦ಬ ನ೦ಬಿಕೆ ಪ್ರಚಲಿತವಾಗಿದೆ. ಗುಹೆಯಲ್ಲಿ ಬಣ್ಣದ ಗುರುತುಗಳು ಮತ್ತು ತೀರ್ಥಯಾತ್ರಿಗಳ ಗುರುತುಗಳು ಕಾಣಬರುತ್ತವೆ. ಬಾಹ್ಯ ಸಂಪರ್ಕಗಳು The Ramayana of Valmiki, online version, English translation by Ralph T.H. Griffith. The Mahabharata of Vyasa, online version, English translation by Kisari Mohan Ganguli. Photos of the tympanum at Banteay Srei in Cambodia depicting Sugriva's combat with Vali and Rama's intervention. ಪುರಾಣ ಇತಿಹಾಸ ಧರ್ಮ ಸಾಹಿತ್ಯ ಭಾರತ ರಾಮಾಯಣದ ಪಾತ್ರಗಳು
1054
https://kn.wikipedia.org/wiki/%E0%B2%89%E0%B2%A1%E0%B3%81%E0%B2%AA%E0%B2%BF%20%E0%B2%9C%E0%B2%BF%E0%B2%B2%E0%B3%8D%E0%B2%B2%E0%B3%86
ಉಡುಪಿ ಜಿಲ್ಲೆ
ಉಡುಪಿ () ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಶುದ್ಧವಾದ ವೈಷ್ಣವಮತ ಪ್ರತಿಪಾದಿಸಿದ ತ್ರೈಲೋಕ್ಯಾಚಾರ್ಯರಾದ ಶ್ರೀ ಮಧ್ವಾಚಾರ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಕೃಷ್ಣ ಮಂದಿರ ಇರುವುದು ಉಡುಪಿಯಲ್ಲಿಯೇ. ಶ್ರೀ ವ್ಯಾಸತೀರ್ಥರು, ಶ್ರೀಮದ್ ವಾದಿರಾಜ ತೀರ್ಥರು, ಶ್ರೀರಾಘವೇಂದ್ರ ತೀರ್ಥ ಗುರುರಾಜರು, ಪುರಂದರದಾಸರು, ಕನಕದಾಸರು, ವಿಜಯದಾಸರು ಈ ಎಲ್ಲ ಮಹನೀಯರೂ ಸಹ ಶ್ರೀಮನ್ ಮಧ್ವಾಚಾರ್ಯರನ್ನು ನಿತ್ಯ ಉಪಾಸಿಸುವ, ಅವರ ಅನುಯಾಯಿಗಳೇ. ಉಡುಪಿ ಜಿಲ್ಲೆ ಆಗಸ್ಟ್ ೧೯೯೭ ನಲ್ಲಿ ಅಸ್ತಿತ್ವಕ್ಕೆ ಬಂದಿತು. ಉತ್ತರದ ನಾಲ್ಕು ತಾಲೂಕುಗಳಾದ ಉಡುಪಿ, ಕುಂದಾಪುರ, ಕಾರ್ಕಳ ಹೆಬ್ರಿಗಳನ್ನು ದಕ್ಷಿಣ ಕನ್ನಡದಿಂದ ಪ್ರತ್ಯೇಕಿಸಿ ಉಡುಪಿ ಜಿಲ್ಲೆಯನ್ನಾಗಿ ರಚಿಸಲಾಯಿತು. ಬ್ರಹ್ಮಾವರ ತಾಲೂಕನ್ನು ೨೦೧೮ರಲ್ಲಿ ರೂಪಿಸಲಾಯಿತು. ಇಲ್ಲಿನ ಜನಸಂಖ್ಯೆ (೨೦೧೧ ರಂತೆ) ೧೧,೭೭,೩೬೧ ಇದರಲ್ಲಿ ೫,೩೨,೧೩೧ ಜನ ಪುರುಷರು ೬,೧೫,೨೩೦ ಮಹಿಳೆಯರು ಇದ್ದಾರೆ. ಇಲ್ಲಿನ ಪ್ರಮುಖ ಭಾಷೆಗಳು ತುಳು ಇಲ್ಲಿನ ಅಧೀಕೃತ ಭಾಷೆಯಾಗಿದೆ. ತುಳು ಮಾತನಾಡುವ ಜನ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಉಡುಪಿ ಜಿಲ್ಲೆಯ ತೆಂಕು ಭಾಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಬಡಗು ಭಾಗವನ್ನು ಒಟ್ಟಾಗಿ ತುಳುನಾಡು ಎಂದು ಕರೆಯುತ್ತಾರೆ. ಇಲ್ಲಿನ ಇತರ ಭಾಷೆಗಳೆಂದರೆ ಕನ್ನಡ- ಕುಂದಾಪುರ ಕನ್ನಡ ಸೇರಿಸಿ. ಕೊಂಕಣಿ ನವಾಯತಿ ಬ್ಯಾರಿ ಕೊರಗ ಉರ್ದು ಇನ್ನೂ ಹತ್ತು ಹಲವು ಭಾಷೆಗಳಿವೆ. ಉಡುಪಿ ಹೆಸರಿನ ನಿಷ್ಪತ್ತಿ ಒಂದು ನಂಬಿಕೆಯ ಪ್ರಕಾರ ಉಡುಪಿಯ ಹೆಸರು ತುಳುವಿನ ಹೆಸರು "ಒಡಿಪು"ವಿನಿಂದ ಬಂದಿರುವುದಾಗಿ ನಂಬಲಾಗಿದೆ. ತುಳುವಿನ ಈ ಹೆಸರು ಮಲ್ಪೆ ಕಡಲ ತೀರದಲ್ಲಿರುವ ಒಡಬಾಂಡೇಶ್ವರ ದೇವಸ್ಥಾನದಿಂದಾಗಿ ಬಂದಿರುವುದಾಗಿ ಕೆಲವು ವಿದ್ವಾಂಸರು ಅಭಿಪ್ರಾಯಪಟ್ಟಿದ್ದಾರೆ. ಇನ್ನೊಂದು ನಂಬಿಕೆಯ ಪ್ರಕಾರ ಉಡುಪಿಯ ಹೆಸರು ಸಂಸ್ಕೃತ ದ "ಉಡು" ಹಾಗೂ "ಪ" ಶಬ್ದಗಳಿಂದ ಬಂದಿರುವುದಾಗಿ ನಂಬಲಾಗಿದೆ. ಸಂಸ್ಕೃತ ಶಬ್ದ "ಉಡು"ವಿನ ಅರ್ಥ "ನಕ್ಷತ್ರಗಳು" ಹಾಗೂ "ಪ"ವಿನ ಅರ್ಥ "ಒಡೆಯ". ದಂತಕತೆಯ ಪ್ರಕಾರ, ಚಂದ್ರನ ಪ್ರಕಾಶವು ಒಂದು ಸಾರಿ ದಕ್ಷರಾಜನ ಶಾಪದಿಂದಾಗಿ ಕಡಿಮೆಯಾಯಿತು. ಚಂದ್ರನು ದಕ್ಷರಾಜನ ೨೭ ಹೆಣ್ಣುಮಕ್ಕಳನ್ನು (ಹಿಂದೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ೨೭ ನಕ್ಷತ್ರಗಳು) ಮದುವೆ ಆಗಿದ್ದನು. ಚಂದ್ರ ಹಾಗು ಚಂದ್ರನ ಹೆಂಡತಿಯರು ಉಡುಪಿಯ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಶಿವನನ್ನು ಕುರಿತು ತಪಸ್ಸು ಮಾಡಿದ್ದರು. ಶಿವನು ಒಲಿದು ಚಂದ್ರನ ಪ್ರಕಾಶವು ಮರಳಿ ಬರುವಂತೆ ಮಾಡಿದನು. ಹಾಗಾಗಿ ನಕ್ಷತ್ರಗಳ ಒಡೆಯ (ಸಂಸ್ಕೃತ: ಉಡುಪ) ತಪಸ್ಸು ಮಾಡಿದ್ದರಿಂದ ಈ ಕ್ಷೇತ್ರಕ್ಕೆ ಉಡುಪಿ ಎಂಬ ಹೆಸರು ಬಂದಿತೆಂದು ಎಂದು ಪ್ರತೀತಿ. ಆದರೆ, ಭಾಷಾಶಾಸ್ತ್ರದ ದೃಷ್ಟಿಯಿಂದ ನೋಡಿದರೆ, 'ಒಡಿಪು' ಶಬ್ದದಿಂದ ಉಡುಪಿ ಎಂಬ ಹೆಸರು ಹುಟ್ಟಿದೆ ಎಂಬುದು ಹೆಚ್ಚು ಸಮರ್ಪಕವಾಗಿದೆ. ಈಗಲೂ ತುಳುವಿನಲ್ಲಿ ಈ ಊರನ್ನು ಒಡಿಪು ಎಂದು ಕರೆಯಲಾಗುತ್ತಿರುವುದು ನಿಜಕ್ಕೂ ವಿಶೇಷ. ಇತಿಹಾಸ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಇತಿಹಾಸ ಪರಂಪರೆಯು ಹೆಚ್ಚು ಸಮಾನ ಸ್ವರೂಪದ್ದು. ಇಡೀ ಕರ್ನಾಟಕದ ಕರಾವಳಿ ಪ್ರದೇಶ ಪರಶುರಾಮ ಸೃಷ್ಟಿಯೆಂದು ಪ್ರತೀತಿಯುಂಟು. ಮಾರ್ಕಂಡೇಯ, ವಾಯು ಮತ್ತು ಭವಿಷ್ಯೋತ್ತರ ಪುರಾಣಗಳು ಇಲ್ಲಿನ ಕೆಲವು ನದಿಗಳ ಮತ್ತು ಪರ್ವತಗಳ ಹೆಸರುಗಳನ್ನು ಉಲ್ಲೇಖಿಸುತ್ತವೆ. ತಮಿಳಿನ ‘ಸಂಗಂ’ ಕಾಲದ ಸಾಹಿತ್ಯದಲ್ಲಿ ತುಳುನಾಡಿನ ಪ್ರಸ್ತಾಪ ಬರುತ್ತದೆ. ಅಶೋಕನ ಶಾಸನಗಳಲ್ಲಿ ಬರುವ ಸಾತಿಯಪುತ್ರ ಅಥವಾ ಸತ್ಯಪುತ್ರರೆಂಬ ಸಮುದಾಯದ ಉಲ್ಲೇಖ ಈ ಪ್ರದೇಶದ ಜನರನ್ನು ಕುರಿತದ್ದೆಂದು ಕೆಲವು ಇತಿಹಾಸಕಾರರು ಅಭಿಪ್ರಾಯಪಟ್ಟಿದ್ದಾರೆ. ಉಡುಪಿ ಜಿಲ್ಲೆ ತೀರಪ್ರದೇಶದಲ್ಲಿರುವುದರಿಂದ ಇದು ಹೊರಗಿನ ಪ್ರಪಂಚದ ಸಂಪರ್ಕವನ್ನು ತಪ್ಪಿಸಿಕೊಳ್ಳುವುದು ಸಾಧ್ಯವಿರಲಿಲ್ಲ. ಪ್ರಸಕ್ತ ಶಕೆಯ ಆಚೀಚೆಗಿನ ಶತಮಾನಗಳಿಗೆ ಸೇರಿದ ಗ್ರೀಕ್ ಮತ್ತು ರೋಮನ್ನರ ಪ್ರವಾಸಿ ಕಥನಗಳಲ್ಲಿ ಈ ತೀರದ ಅನೇಕ ಸ್ಥಳಗಳ ಉಲ್ಲೇಖಗಳಿವೆ. ಅವುಗಳಲ್ಲಿ ನೇತ್ರಾವತಿ, ಮಂಗಳೂರು, ಬಸರೂರುಗಳು ಸೇರಿವೆ. ಪ್ರಾಚೀನಕಾಲದಿಂದಲೂ ಹೊರದೇಶಗಳೊಂದಿಗೆ ವಾಣಿಜ್ಯ ಸಂಪರ್ಕ ಬೆಳೆದುಬಂದದ್ದು ನಿಸ್ಸಂದೇಹ. ಗ್ರೀಕ್ ನಾಟಕವೊಂದರಲ್ಲಿ ಬರುವ ಪಾತ್ರಗಳ ಸನ್ನಿವೇಶ ಈ ಕಡಲತೀರದ್ದೆಂದು ಮತ್ತು ಅಲ್ಲಿನ ಸಂಭಾಷಣೆಯಲ್ಲಿ ಬಳಸಿರುವ ಕೆಲವು ಪದಗಳು ತುಳು ಹಾಗೂ ಕನ್ನಡ ಪದಗಳೆಂದು ಗೋವಿಂದ ಪೈಯವರು ಅಭಿಪ್ರಾಯಪಟ್ಟಿದ್ದಾರೆ. ಇವು ಹಳಗನ್ನಡ ಪದಗಳೆಂದು ಪ್ರತಿಪಾದಿಸುವವರೂ ಇದ್ದಾರೆ. ಒಟ್ಟಿನಲ್ಲಿ ಈ ಜಿಲ್ಲೆ ಪ್ರ.ಶ.ಪೂರ್ವ ಕಾಲದಿಂದಲೂ ಸಾಮಾಜಿಕ, ಧಾರ್ಮಿಕ ಮತ್ತು ಆರ್ಥಿಕ ವ್ಯವಸ್ಥೆಗಳನ್ನು ಹೊಂದಿದ್ದ ಪ್ರದೇಶವೆಂಬುದು ದೃಢಪಡುತ್ತದೆ. ಈ ಜಿಲ್ಲೆಯ ಇತಿಹಾಸ ಕಾಲದ ಸ್ಪಷ್ಟ ಪುರಾವೆಗಳು ದೊರಕುವುದು ಆಳುಪರ ಕಾಲದಲ್ಲಿ. ಆಳುಪರ ಆಳ್ವಿಕೆ ಪ್ರಸಕ್ತ ಶಕಾರಂಭದ ಕಾಲಕ್ಕೇ ಪ್ರಾರಂಭವಾಗುತ್ತದೆಂದು ತಿಳಿದುಬರುತ್ತದೆ. ಅವರು ನಾಗಾರಾಧಕರಾಗಿದ್ದರು ಮತ್ತು ಶೈವ ಪಂಥೀಯರಾಗಿದ್ದರು. ಕದಂಬರು ನೆರೆಯ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ರಾಜ್ಯ ಸ್ಥಾಪಿಸಿದ ಮೇಲೆ ಈ ಪ್ರದೇಶವೂ ಅವರ ಸಾರ್ವಭೌಮತ್ವಕ್ಕೆ ಒಳಪಟ್ಟಿತ್ತು. ಆಗ ಅವರು ಇಲ್ಲಿ ಅಹಿಚ್ಫತ್ರದಿಂದ ಬ್ರಾಹ್ಮಣರನ್ನು ಕರೆಸಿ ಇಲ್ಲಿನ ಮಠ ಮತ್ತು ಅಗ್ರಹಾರ ಪರಂಪರೆಗೆ ಬುನಾದಿ ಹಾಕಿದರೆಂದು ಹೇಳಲಾಗಿದೆ. ಜಮೀನು ಸಾಗುವಳಿ ಮತ್ತು ನಿರ್ವಹಣೆಯಲ್ಲಿ ಅನೇಕ ಕಟ್ಟುಪಾಡುಗಳನ್ನು ಕದಂಬರು ತಂದರೆಂಬ ನಂಬಿಕೆಯಿದೆ. ಕದಂಬರ ಪ್ರಾಬಲ್ಯ ಕಡಿಮೆಯಾಗಿ ಬಾದಾಮಿ ಚಾಳುಕ್ಯರು ಮತ್ತು ತಲಕಾಡಿನ ಗಂಗರು ಈ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸಿದಾಗ ಆಳುಪರು ಅವರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡು ತಮ್ಮ ರಾಜ್ಯವನ್ನು ವಿಸ್ತರಿಸಿದರು. ಆಳುಪರನ್ನು ಸೋಮಕುಲದವರೆಂದೂ ಮೀನ ಲಾಂಛನದವರೆಂದೂ ಹೇಳಲಾಗಿದೆ. ಇವರು ೬ನೆಯ ಶತಮಾನದ ಹೊತ್ತಿಗೆ ಉಡುಪಿ ಜಿಲ್ಲೆಯ ಉದಯಪುರ (ಉದ್ಯಾವರ) ಮಂಗಳಪುರ (ಮಂಗಳೂರು)ಗಳಲ್ಲಿ ರಾಜಧಾನಿಗಳನ್ನು ಸ್ಥಾಪಿಸಿ ಆಳಿದ್ದರಲ್ಲದೆ ಘಟ್ಟದ ಮೇಲಿನ ಕೆಲವು ಭಾಗಗಳಲ್ಲೂ ಆಳ್ವಿಕೆ ನಡೆಸಿದರು. ಪಶ್ಚಿಮ ಚಾಳುಕ್ಯರ ಬೆಂಬಲದೊಂದಿಗೆ ಅವರು 8ನೆಯ ಶತಮಾನದವರೆಗೂ ಆಳ್ವಖೇಡ, ಬನವಾಸಿ ಮಂಡಲ ಮತ್ತು ಹೊಂಬುಚರ್ಚ್‌ (ಹೊಸನಗರ ತಾಲ್ಲೂಕು) ಪ್ರಾಂತ್ಯಗಳನ್ನು ಆಳಿದರೆಂದು ಹೇಳಬಹುದು. ಉಡುಪಿ ಜಿಲ್ಲೆಯ ಬಾರಹಕನ್ಯಾಪುರ ಅಥವಾ ಬಾರಕೂರು ಇವರ ರಾಜಧಾನಿಗಳಲ್ಲೊಂದಾಗಿತ್ತು. ರಾಷ್ಟ್ರಕೂಟರ ಕಾಲದಲ್ಲಿ ಇವರ ಪ್ರಭಾವ ತಗ್ಗಿತ್ತು. ಗಂಗರಿಗೆ ಇವರು ನಾಮಮಾತ್ರ ಅಧೀನತೆ ತೋರಿಸಿ ಅವರೊಂದಿಗೆ ರಕ್ತಸಂಬಂಧ ಮಾಡುವ ಮೂಲಕ ಸೌಹಾರ್ದ ಬಾಂಧವ್ಯ ಹೊಂದಿದ್ದರು. ಇವರು ಕೆಲವೆಡೆ ತಮ್ಮನ್ನು ಪಾಂಡ್ಯರೆಂದು ಕರೆದುಕೊಂಡಿದ್ದಾರೆ. ಮೀನು ಇವರ ಲಾಂಛನವಾಗಿತ್ತು. ಹೊಯ್ಸಳರು ಪ್ರಾರಂಭದಲ್ಲಿ ಆಳುಪರ ಮೇಲೆ ಸಾಂಕೇತಿಕ ಆಧಿಪತ್ಯ ಹೊಂದಿದ್ದರೂ ಮೂರನೆಯ ಬಲ್ಲಾಳನ ಕಾಲದಲ್ಲಿ ಈ ಪ್ರದೇಶದ ಆಗುಹೋಗುಗಳಲ್ಲಿ ಅವರು ಹೆಚ್ಚಾಗಿ ಭಾಗವಹಿಸಿದ್ದು ಕಂಡುಬರುತ್ತದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಮುಖ್ಯವಾಗಿ ಶೈವ ಪರಂಪರೆ ಹೊಂದಿದ್ದ ಪ್ರದೇಶಗಳು. ನಾಗಾರಾಧನೆ ಮತ್ತು ಶಿವ ಪೂಜೆ ಇಲ್ಲಿನ ಮೂಲ ಧಾರ್ಮಿಕ ಪರಂಪರೆಯ ಸ್ವರೂಪವಾಗಿತ್ತು. ತರುವಾಯ ವೈಷ್ಣವ ಪಂಥ ಪ್ರವೇಶಿಸಿತು. ಮಧ್ವಚಾರ್ಯರು ೧೩ನೆಯ ಶತಮಾನದಲ್ಲಿ ಉಡುಪಿಯಲ್ಲಿ ಅಷ್ಟಮಠಗಳನ್ನು ಸ್ಥಾಪನೆ ಮಾಡಿದ ಮೇಲೆ ಮಾಧ್ವ ವೈಷ್ಣವಮತ ಪ್ರಬಲವಾಯಿತು. ಜೈನಧರ್ಮ ಪ್ರಾರಂಭದಿಂದಲೂ ರಾಜಾಶ್ರಯ ಪಡೆದಿದ್ದು ೧೮ನೆಯ ಶತಮಾನದವರೆಗೂ ಕ್ರಿಯಾಶೀಲ ಧರ್ಮವಾಗಿ ಬೆಳೆಯಿತು. ಸ್ಥಳೀಯ ಪಂಜರವಳ್ಳಿ, ಭೂತ ಮೊದಲಾದ ಶಕ್ತಿಗಳ ಆರಾಧನೆ ಪ್ರಾರಂಭದಿಂದಲೂ ನಡೆದುಬಂದಿದೆ. ಪಾರ್ವತಿಯ ಅವತಾರವಾದ ಶಕ್ತಿದೇವತೆಗಳ ಆರಾಧನೆ (ಉದಾ: ಕೊಲ್ಲೂರು ಮೂಕಾಂಬಿಕೆ) ಜನಪ್ರಿಯವಾಗಿದೆ. ಈ ಪ್ರಾಂತದ ಜನರಿಗೆ ಧರ್ಮಶ್ರದ್ಧೆ ಹೆಚ್ಚು. ಭೂತಾರಾಧನೆಯಾಗಲೀ, ಕೃಷ್ಣಪೂಜೆಯಾಗಲೀ ಹೋಮ-ಹವನಗಳಾಗಲೀ ಎಲ್ಲದರಲ್ಲೂ ಇವರಿಗೆ ಹೆಚ್ಚಿನ ನಿಷ್ಠೆ. ವಿಜಯನಗರದ ಆಳ್ವಿಕೆ ಪ್ರಾರಂಭವಾದಾಗ ಹಿಂದಿನ ಪಾಳೆಯಗಾರರ ಅಥವಾ ಸ್ಥಾನಿಕ ರಾಜರ ಆಳ್ವಿಕೆಯ ಪ್ರಭಾವ ತಗ್ಗಿತು. ಆ ಕಾಲದಲ್ಲಿ ವಿಜಯನಗರದ ಸಾಮ್ರಾಟರು ನೇರವಾಗಿ ತಮ್ಮ ಪ್ರಾಂತಾದಿಕಾರಿಗಳ ಮೂಲಕ ಆಳ್ವಿಕೆ ನಡೆಸಲು ಪ್ರಾರಂಭಿಸಿದರು. ಬಾರಕೂರು ಮತ್ತು ಮಂಗಳೂರು ಈ ಆಡಳಿತ ಕೇಂದ್ರಗಳಾಗಿದ್ದವು. ಮಂಗಳೂರು ರಾಜ್ಯವೆಂದೇ ಈ ಪ್ರಾಂತ್ಯವನ್ನು ಕರೆಯುತ್ತಿದ್ದರು. ೧೩೪೨ರಲ್ಲಿ ಈ ಮಾರ್ಗವಾಗಿ ಹಾದುಹೋದ ಇಬ್ನಬೂತೂತ ರಾಜ್ಯಾಧಿಕಾರಿಗಳು ಆಗಾಗ ಬದಲಾಗುತ್ತಿದ್ದುದರ ಬಗ್ಗೆ ತಿಳಿಸಿದ್ದಾನೆ. ಪೋರ್ಚುಗೀಸ್ ನಾವಿಕ ವಾಸ್ಕೋಡಿಗಾಮ ಉಡುಪಿಯ ಬಳಿಯ ದ್ವೀಪಗಳಿಗೆ ಭೇಟಿ ಕೊಟ್ಟಿದ್ದನೆಂದು ತಿಳಿದುಬರುತ್ತದೆ. ಈಗ ಆ ದ್ವೀಪಗಳು ಸಂತಮೇರಿ ದ್ವೀಪಗಳೆಂದು ಹೆಸರು ಪಡೆದಿವೆ. ವಿಜಯನಗರದ ಅರಸ ಶ್ರೀಕೃಷ್ಣದೇವರಾಯ ಪೋರ್ಚುಗೀಸರೊಂದಿಗೆ ಹೆಚ್ಚಿನ ಸ್ನೇಹದಿಂದ ನಡೆದುಕೊಂಡ. ಆಗ ಪೋರ್ಚುಗೀಸರು ಕರಾವಳಿಯ ಬಂದರುಗಳಲ್ಲಿ ವ್ಯಾಪಾರದ ನೆಪದಲ್ಲಿ ಬಲವಾಗಿ ನೆಲೆಗೊಂಡರು. ಉಳ್ಳಾಲದ ರಾಣಿ ಅಬ್ಬಕ್ಕ ದೇವಿ ಮತ್ತು ಬಿದನೂರಿನ ನಾಯಕರು ವಿಜಯನಗರದ ಪತನದ ಅನಂತರ ಪೋರ್ಚುಗೀಸರನ್ನು ಹತೋಟಿಯಲ್ಲಿಡಲು ಅನೇಕ ಕಾರ್ಯಾಚರಣೆಗಳನ್ನು ನಡೆಸಿದರು. ಬಿದನೂರ ನಾಯಕರು ಮಲ್ಪೆ ಮತ್ತು ಕುಂದಾಪುರಗಳಲ್ಲಿ ಕೋಟೆಗಳನ್ನು ನಿರ್ಮಿಸಿದರು. ಅನೇಕ ದಂಡರಸರು ವಿಜಯನಗರ ಕಾಲದಲ್ಲಿ ಮುಂದುವರೆದಿದ್ದು ಅನಂತರ ಪ್ರಬಲರಾಗಿ ಈ ಪ್ರದೇಶದಲ್ಲಿ ಆಳಿದರು. ಅವರಲ್ಲಿ ಕಾರ್ಕಳದ ಭೈರರಸರು ಮತ್ತು ವೇಣೂರಿನ ಅಜಿಲರು ಪ್ರಮುಖರು. ಇವರ ಕಾಲದಲ್ಲಿ ಈ ಊರುಗಳಲ್ಲಿ ಅನೇಕ ಜೈನ ಬಸದಿಗಳು ವಿಶ್ವವಿಖ್ಯಾತ ಗೊಮ್ಮಟ ವಿಗ್ರಹಗಳು ನಿರ್ಮಾಣವಾದವು. ಉಡುಪಿಯ ಬಳಿ ಸುರಳದಲ್ಲಿ ತೊಳಹಾರರು ಮತ್ತು ಹೊನ್ನಕಂಬಳಿ ಅರಸರು ಆಳುತ್ತಿದ್ದರು. ಉತ್ತರಕನ್ನಡ ಜಿಲ್ಲೆಯ ಹಾಡುವಳ್ಳಿಯಿಂದ ಆಳುತ್ತಿದ್ದ ಅರಸರು ಉಡುಪಿ ಜಿಲ್ಲೆಯ ಉತ್ತರದ ಕೆಲವು ಭಾಗಗಳಲ್ಲಿ ಆಡಳಿತ ನಡೆಸಿದರು. ಮೈಸೂರು ರಾಜ್ಯದ ಹೈದರಾಲಿ ಮತ್ತು ಟಿಪ್ಪುಸುಲ್ತಾನರು ಈ ಇಡೀ ಕರಾವಳಿ ಭಾಗವನ್ನು ಗೆದ್ದಕೊಂಡರು. ಆದರೆ ಇಂಗ್ಲಿಷರ ಪ್ರಬಲ ಪ್ರತಿರೋಧದಿಂದಾಗಿ ೧೭೯೨ರ ಯುದ್ಧದಲ್ಲಿ ಅನಂತರದ ಒಪ್ಪಂದದ ಮೇರೆಗೆ ಈ ಭಾಗ ಬ್ರಿಟಿಷರ ವಶವಾಯಿತು. ಟಿಪ್ಪುಸುಲ್ತಾನನು ಇಲ್ಲಿನ ಅನೇಕ ಸ್ಥಳೀಯ ರಾಜರನ್ನು ಪದಚ್ಯುತಿಗೊಳಿಸಿದ್ದ. ೧೮೩೭ ರಲ್ಲಿ ಕಲ್ಯಾಣಸ್ವಾಮಿ ಮತ್ತು ಲಕ್ಷ್ಮಪ್ಪ ಬಂಗೇಶ ಎಂಬ ಅರಸುಗಳು ಬ್ರಿಟಿಷರ ವಿರುದ್ಧ ದಂಗೆಯೆದ್ದರು. ಬ್ರಿಟಿಷರು ಈ ದಂಗೆಯನ್ನು ಅಡಗಿಸಿದರು. ೧೮೬೦ರಲ್ಲಿ ಕನ್ನಡ ಜನರಿದ್ದ ಕರಾವಳಿ ಪ್ರದೇಶವನ್ನು ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳೆಂದು ವಿಭಜಿಸಲಾಯಿತು. ೧೮೬೭ ರಲ್ಲಿ ಮೊದಲನೆಯದನ್ನು ಮುಂಬಯಿ ಪ್ರಾಂತ್ಯಕ್ಕೂ ಎರಡನೆಯದನ್ನು ಮದರಾಸು ಪ್ರಾಂತ್ಯಕ್ಕೂ ಸೇರಿಸಲಾಯಿತು. ಬ್ರಿಟಿಷ್ ಭಾರತದ ಭಾಗವಾಗಿದ್ದ ಈ ಕರಾವಳಿ ಜಿಲ್ಲೆ ಸ್ವಾತಂತ್ರ್ಯ ಹೋರಾಟದಲ್ಲಿ ಮುಂದಿತ್ತು. ಸತ್ಯಾಗ್ರಹಿಗಳು ಸ್ವತಂತ್ರ್ಯವಾಗಿ ಪತ್ರಿಕೆಗಳನ್ನು ಹೊರಡಿಸಿ ಜನತೆಯನ್ನು ಜಾಗೃತಿಗೊಳಿಸಿದರು. ಸ್ವದೇಶಾಭಿಮಾನಿ, ತಿಲಕ ಸಂದೇಶ (೧೯೧೯), ಸತ್ಯಾಗ್ರಹಿ (೧೯೨೧), ಸ್ವದೇಶಿ ಪ್ರಚಾರಕ (೧೯೪೦) ಮೊದಲಾದ ದೇಶಪ್ರೇಮಿ ಪತ್ರಿಕೆಗಳು ಸ್ವಾತಂತ್ರ್ಯ ಚಳವಳಿಯನ್ನು ಬೆಂಬಲಿಸಿದವು. ಕಾರ್ನಾಡು ಸದಾಶಿವರಾವ್, ಯು.ಎಸ್.ಮಲ್ಯ, ಕಮಲಾದೇವಿ ಚಟ್ಟೋಪಾಧ್ಯಾಯ, ಎಚ್.ವಿ.ಕಾಮತ್ ಮೊದಲಾದವರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದರು. ಎ.ಬಿ.ಶೆಟ್ಟಿ, ಮೋನಪ್ಪ ತಿಂಗಳಾಯ, ಬಿ.ವಿ.ಬಾಳಿಗರಂತಹ ಸಮಾಜ ಸೇವಾಕರ್ತರು ಜನರನ್ನು ಸಂಘಟಿಸಿದರು. ೧೯೨೦ರಲ್ಲಿ ಗಾಂಧೀಜಿ ಮತ್ತು ಶೌಕತ್ ಅಲಿಯವರು ಜಿಲ್ಲೆಗೆ ಭೇಟಿ ನೀಡಿದ್ದರು. ೧೯೨೨ರಲ್ಲಿ ಸರೋಜಿನಿ ನಾಯ್ಡು ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಅಖಿಲ ಕರ್ನಾಟಕ ರಾಜಕೀಯ ಸಮ್ಮೇಳನ ನಡೆಯಿತು. ೧೯೩೪ರಲ್ಲಿ ಮತ್ತೆ ಗಾಂಧೀಜಿಯವರು ಈ ಪ್ರದೇಶಕ್ಕೆ ಭೇಟಿ ನೀಡಿದರು. ಮಾರನೆಯ ವರ್ಷ ರಾಜೇಂದ್ರಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಇನ್ನೊಂದು ರಾಜಕೀಯ ಸಮ್ಮೇಳನ ಇಲ್ಲಿ ಏರ್ಪಟ್ಟಿತು. ೧೯೩೭ರಲ್ಲಿ ಪಂಡಿತ ಜವಾಹರಲಾಲ್ ನೆಹರು ಅವರು ಜಿಲ್ಲೆಯನ್ನು ಸಂದರ್ಶಿಸಿ ಭಾಷಣ ಮಾಡಿದರು. ೧೯೪೨ರ 'ಚಲೇಜಾವ್ ಚಳವಳಿ'ಯು ಇಲ್ಲಿ ಬಿರುಸಾಗಿ ನಡೆಯಿತು. ಆಗ ನೇತೃತ್ವ ವಹಿಸಿದ್ದ ಪ್ರಮುಖರಲ್ಲಿ ಕೆ.ಆರ್.ಕಾರಂತ, ವಿಠಲದಾಸ ಶೆಟ್ಟಿ, ಶ್ರೀನಿವಾಸ ಮಲ್ಯ, ನಾಗಪ್ಪ ಆಳ್ವ, ಎಂ.ಡಿ.ಅಧಿಕಾರಿ, ಶಂಕರ ಆಳ್ವ ಮುಂತಾದವರಿದ್ದರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಹಾಲಿ ಉಡುಪಿ ಜಿಲ್ಲೆಯು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮದರಾಸು ರಾಜ್ಯದಲ್ಲೇ ಮುಂದುವರಿಯಿತು. ೧೯೫೬ರ ನವೆಂಬರ್ ೧ರಂದು ಅಸ್ತಿತ್ವಕ್ಕೆ ಬಂದ ಭಾಷಾವಾರು ಪ್ರಾಂತ್ಯದ ರಚನೆಯಲ್ಲಿ ಇದು ವಿಶಾಲ ಮೈಸೂರು ರಾಜ್ಯದ ಭಾಗವಾಯಿತು. ಮೇಲ್ಮೈಲಕ್ಷಣ ಈ ಜಿಲ್ಲೆಯ ಪೂರ್ವ ಗಡಿಯುದ್ದಕ್ಕೂ ಎತ್ತರವಾದ ಮತ್ತು ದಟ್ಟವಾದ ಕಾಡಿನಿಂದ ಕೂಡಿದ ಪಶ್ಚಿಮ ಘಟ್ಟದ ಶ್ರೇಣಿಗಳಿವೆ. ಅಲ್ಲಲ್ಲಿ ಎತ್ತರವಾದ ಗಿರಿಶಿಖರಗಳು ಮತ್ತು ಮಧ್ಯೆ ಮಧ್ಯೆ ಕಂದರಗಳಿಂದ ಕೂಡಿರುವ ಭೂದೃಶ್ಯ ರುದ್ರರಮಣೀಯವಾಗಿವೆ. ಸಹ್ಯಾದ್ರಿ ಘಟ್ಟಗಳ ಶ್ರೇಣಿಗಳ ನಡುವೆ ಇರುವ ಆಗುಂಬೆ ಘಾಟ್ ರಸ್ತೆಯು ಕರ್ನಾಟಕದ ಮೈದಾನ ಪ್ರದೇಶದೊಂದಿಗೆ ಸಂಪರ್ಕಮಾರ್ಗವಾಗಿದೆ. ಕಾರ್ಕಳದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯನ್ನು ಸೇರಿ ಮುಂದೆ ಶೃಂಗೇರಿ ಮತ್ತು ಕುದುರೆಮುಖಗಳತ್ತ ಕವಲಾಗಿ ಹೋಗುವ ಹೆದ್ದಾರಿ ಈ ಪ್ರದೇಶದ ಇನ್ನೊಂದು ಪ್ರಮುಖ ಮಾರ್ಗ. ಆಗುಂಬೆಗೆ ಉತ್ತರದಲ್ಲಿರುವ ಕೊಡಚಾದ್ರಿ ಬೆಟ್ಟ ಈ ಜಿಲ್ಲೆಯ ಅತ್ಯಂತ ಎತ್ತರದ ಶಿಖರ (೧೩೪೧ಮೀ) ಇದು ಪ್ರವಾಸಿಗಳ ಆಕರ್ಷಣೀಯ ತಾಣವೂ ಹೌದು. ನದಿಗಳು ತೊರೆಗಳು ಮತ್ತು ನಿತ್ಯಹಸಿರು ಕಾಡುಗಳಿಂದ ಕೂಡಿರುವ ಈ ಭಾಗದ ಪ್ರಕೃತಿ ತುಂಬಾ ರಮ್ಯವಾಗಿದೆ. ಘಟ್ಟದಿಂದ ಕೆಳಗೆ ಪಶ್ಚಿಮಾಭಿಮುಖವಾಗಿ ಬಂದಂತೆಲ್ಲಾ ಮೈದಾನ ಪ್ರದೇಶ ತೆರೆದು ಕೊಳ್ಳುತ್ತದೆ. ಅಷ್ಟೇನೂ ಕಡಿದಾಗಿರದ ಇಳಿಜಾರಿನ ಪ್ರದೇಶದಲ್ಲಿ ಅಲ್ಲಲ್ಲಿ ಎತ್ತರದ ಗುಡ್ಡಬೆಟ್ಟಗ ಳುಂಟು. ವ್ಯವಸಾಯದ ಜಮೀನಿನಲ್ಲಿ ಗದ್ದೆಗಳು, ತೆಂಗು, ಅಡಕೆ, ಗೋಡಂಬಿ ತೋಟಗಳಿವೆ. ಕೆಲವೆಡೆ ಕೆಮ್ಮಣ್ಣಿನಿಂದ ಕೂಡಿದ ಬರಡು ದಿಣ್ಣೆಗಳಿವೆ. ಈ ಜಿಲ್ಲೆಯಲ್ಲಿ ಸಮತಟ್ಟಾದ ನೆಲ ಕಡಿಮೆಯೇ. ಜಿಲ್ಲೆಯ ತೀರಪ್ರದೇಶ ಅತ್ಯಂತ ಮುಖ್ಯವಾದ ಭಾಗ. ಇಲ್ಲಿಯ ಜನಸಾಂದ್ರತೆ ಅಧಿಕ. ಇದು ಆರ್ಥಿಕ ಚಟುವಟಿಕೆಗಳಿಂದ ಕೂಡಿದ ಪ್ರದೇಶ. ಇಲ್ಲಿಯ ತೀರ ಪ್ರದೇಶದ ಅಂಚು ಸಾಮಾನ್ಯವಾಗಿ ನೇರವಾಗಿದೆ. ನದಿಗಳು ಸಮುದ್ರ ಸೇರುವ ಎಡೆಗಳಲ್ಲಿ ಕೊಲ್ಲಿಗಳುಂಟಾಗಿವೆ. ಸಮುದ್ರದ ಹಿನ್ನೀರಿನ ಪ್ರದೇಶಗಳು ಮೀನುಗಾರಿಕೆಗೆ ಮತ್ತು ದೋಣಿಗಳ ಸಂಚಾರಕ್ಕೆ ಉಪಯುಕ್ತವಾಗಿವೆ. ಬೈಂದೂರು,ಗಂಗೊಳ್ಳಿ, ಕುಂದಾಪುರ, ಮಲ್ಪೆ, ಪಡುಬಿದ್ರಿ ಮೊದಲಾದ ಪಟ್ಟಣಗಳು ಮೀನುಗಾರಿಕೆಗೆ ಮತ್ತು ವ್ಯಾಪಾರದಿಂದಾಗಿ ಅಭಿವೃದ್ಧಿಗೆ ಬಂದಿವೆ. ಮಲ್ಪೆ ಬಳಿ ಸಂತ ಮೇರಿ ದ್ವೀಪ ಸಮೂಹವಿದೆ. ತೀರದಲ್ಲಿ ವಿರಳವಾಗಿರುವ ದ್ವೀಪಗಳಲ್ಲಿ ಈ ದ್ವೀಪಸಮೂಹ ಪ್ರಮುಖವಾದದ್ದು. ಜಿಲ್ಲೆಯ ಭೂಶಿಲಾರಚನೆಯನ್ನು ಮುಖ್ಯವಾಗಿ ಧಾರವಾಡ ಶಿಲಾವರ್ಗ, ಮಧ್ಯಂತರ ಸೇರ್ಪಡೆಗಳು ಮತ್ತು ಈಚಿನ ರಚನೆಗಳು ಎಂದು ವಿಂಗಡಿಸಬಹುದು. ಧಾರವಾಡ ಶಿಲಾವರ್ಗದಲ್ಲಿ ರೂಪಾಂತರಗೊಂಡ ಅನೇಕ ಪ್ರಾಚೀನ ಶಿಲೆಗಳಿವೆ. ಇವುಗಳಲ್ಲಿ ಮುಖ್ಯವಾಗಿ ಪದರ ಪದರವಾದ ಕಬ್ಬಿಣ ಮಿಶ್ರಿತವಾದ ಕ್ವಾರ್ಟ್ಸೈಟ್ ಮತ್ತು ಟಾಲ್ಕ್‌ ಹಾಗೂ ಹಾರ್ನ್ಬ್ಲೆಂಡ್ ಶಿಷ್ಟ್‌ಗಳು ಕಂಡುಬರುತ್ತವೆ. ಹಾರ್ನ್ಬ್ಲೆಂಡ್ ಹೊಡೆಪೊರೆಗಳು ಅಲ್ಲಲ್ಲಿ ವಿರಳವಾಗಿ ಕಾಣಸಿಗುತ್ತವೆ. ಜಂಬುಕಲ್ಲು ಕರಾವಳಿ ಪ್ರದೇಶದಲ್ಲಿ ಬಹುಮಟ್ಟಿಗೂ ಒಳಭಾಗದಲ್ಲಿ ಸ್ವಲ್ಪಮಟ್ಟಿಗೂ ಇದೆ. ಕರಾವಳಿಯಲ್ಲಿ ಕಂಡುಬರುವ ಮೆಕ್ಕಲು, ಜೇಡಿ ಮತ್ತು ಸುಣ್ಣಕಲ್ಲು ಪದರಗಳು ಈಚಿನ ರಚನೆಗಳಾಗಿವೆ. ಜಲಸಂಪತ್ತು ಇಲ್ಲಿಯ ಭೌಗೋಳಿಕ ಸನ್ನಿವೇಶ ಹಾಗೂ ವಾಯುಗುಣದಿಂದಾಗಿ ಇಲ್ಲಿ ಹೆಚ್ಚಿನ ಜಲಸಂಪನ್ಮೂಲವಿದೆ. ನೈರುತ್ಯ ಮಾರುತಗಳು ಇಲ್ಲಿನ ತೀರ ಮತ್ತು ಘಟ್ಟ ಪ್ರದೇಶದಲ್ಲಿ ಹೇರಳವಾಗಿ ಮಳೆ ಸುರಿಸುತ್ತವೆ. ಜೂನ್ ತಿಂಗಳಿಂದ ಸೆಪ್ಟೆಂಬರ್ ವರೆಗಿನ ಮುಂಗಾರಿನ ಕಾಲದಲ್ಲಿ ಬರುವ ಮಳೆಯಿಂದಾಗಿ ಪಶ್ಚಿಮ ಘಟ್ಟಗಳಲ್ಲಿ ಅನೇಕ ನದಿತೊರೆಗಳು ಹುಟ್ಟಿ ಪಶ್ಚಿಮಾಭಿಮುಖವಾಗಿ ಹರಿದುಬರುತ್ತವೆ. ಇವುಗಳ ಉದ್ದ ಕಡಿಮೆಯಾದರೂ ನೀರು ಅಧಿಕವಾಗಿರುತ್ತದೆ. ಗಂಗೊಳ್ಳಿ ನದಿಯು (ಕುಂದಾಪುರದ ಬಳಿ) ಐದು ಉಪ ಹೊಳೆಗಳನ್ನು ಕೂಡಿಕೊಂಡು ಸಮುದ್ರಸೇರುವುದರಿಂದ ಈ ಸ್ಥಳವನ್ನು ಪಂಚಗಂಗಾವಳಿ ಎಂದು ಕರೆಯುತ್ತಾರೆ. ಇಲ್ಲಿ ವಿಸ್ತಾರವಾದ ಅಳಿವೆ ಇದೆ. ಇಲ್ಲಿ ಬಂದರು ಇದೆ. ಗುರುಪುರ, ಸ್ವರ್ಣ, ಸೀತಾ, ಹಳದಿ, ಚಕ್ರಾ ಮತ್ತು ಕೊಲ್ಲೂರು ನದಿಗಳು ಮುಖ್ಯವಾದವು. ಸೀತಾನದಿ ಮತ್ತು ಸ್ವರ್ಣನದಿಗಳು ಬಾರಕೂರು ಬಳಿ ಒಟ್ಟುಗೂಡಿ ಸಮುದ್ರ ಸೇರುತ್ತವೆ. ಈ ಎಲ್ಲ ನದಿಗಳು ಸೇರುವ ಹಿನ್ನೀರು ಪ್ರದೇಶ ದೋಣಿಗಳ ಸಂಚಾರಕ್ಕೆ ಅನುಕೂಲಕರವಾಗಿದೆ. ಜಿಲ್ಲೆಯಲ್ಲಿ ಜಲಸಂಪತ್ತು ಹೇರಳವಾಗಿದ್ದರೂ ಅದು ವ್ಯವಸಾಯಕ್ಕೆ ಉಪಯೋಗವಾಗುವುದಕ್ಕಿಂತ ಸಮುದ್ರಕ್ಕೆ ಹರಿದುಹೋಗುವುದೇ ಹೆಚ್ಚು. ಕಾರ್ಕಳ ತಾಲ್ಲೂಕಿನ ಭಂಡಾಜಿ ಜಲಪಾತದಲ್ಲಿ ನೀರು ೭೦೦ ಮೀ ಗಳ ಎತ್ತರದಿಂದ ಧುಮುಕುತ್ತದೆ. ಇದರೊಂದಿಗೆ ತಾಲ್ಲೂಕಿನ ರಾಮಸಾಗರ ಸರೋವರ ಮುಖ್ಯ ಆಕರ್ಷಣೆಯಾಗಿವೆ. ಅರಣ್ಯಸಂಪತ್ತು ಪಶ್ಚಿಮ ಘಟ್ಟದ ಕಾಡುಗಳಲ್ಲಿ ನಿತ್ಯಹರಿದ್ವರ್ಣ ಮತ್ತು ಎಲೆ ಉದುರುವ ಸಸ್ಯವರ್ಗಗಳಿವೆ. ಇಲ್ಲಿನ ಅರಣ್ಯಗಳು ಪ್ರಪಂಚದಲ್ಲಿ ಅತ್ಯಂತ ವೈವಿಧ್ಯಮಯ ಸಸ್ಯಗಳನ್ನು ಹೊಂದಿರುವ ವಿರಳ ಅರಣ್ಯಗಳ ಸಾಲಿಗೆ ಸೇರುತ್ತವೆ. ಒಟ್ಟು ೯೯೪೩೯ ಹೆಕ್ಟೇರುಗಳ ಅರಣ್ಯ ಪ್ರದೇಶವಿದೆ. ಶ್ರೀಗಂಧ, ತೇಗ, ನಂದಿ, ಮತ್ತಿ, ಬೀಟೆ, ಸಿರಿಹೊನ್ನೆ, ದಬ್ಬೆ, ಕೋಗಿಲೆ, ಹಲಸು ಮೊದಲಾದ ಮೌಲ್ಯಯುತವಾದ ಮರಗಳು ಇಲ್ಲಿಯ ಕಾಡುಗಳಲ್ಲಿವೆ. ಆಲ, ಅತ್ತಿ, ಸಂಪಿಗೆ, ಅರಳೆ, ಮಾವು, ಹೊಂಗೆ ಮರಗಿಡಗಳು ಇವೆ. ಕೆಲವೆಡೆ ಬಿದಿರು, ಬೆತ್ತ, ವಾಟಿ, ಕೇದಿಗೆ, ಈಚಲು, ಬಗನಿ ಮುಂತಾದವು ಇವೆ. ಏಲಕ್ಕಿ, ಕಾಡುಮೆಣಸು, ಸೀಗೆ, ಗೇರು, ಅಂಟುವಾಳ, ಚಕ್ಕೆ ಮೊದಲಾದವು ಇಲ್ಲಿಯ ಅರಣ್ಯೋತ್ಪನ್ನಗಳು. ನಿಂಬೆ, ಕಾಡು, ಕಂಚಿ, ದೊಡ್ಡಳ್ಳಿಕಾಯಿ, ಕಾಡುಕಿತ್ತಳೆ, ಚಕ್ಕೋತ, ನೆಲ್ಲಿಕಾಯಿ ಮುಂತಾದವೂ ಇವೆ. ಇಲ್ಲಿ ದಕ್ಷಿಣ ಭಾರತದ ಎಲ್ಲ ಪ್ರಾಣಿವರ್ಗವಿದೆ. ಹುಲಿ, ಚಿರತೆ, ಆನೆ, ಕಾಟಿ, ಕಡವೆ, ಕಾಡುಹಂದಿಗಳಂತಹ ದೊಡ್ಡ ಪ್ರಾಣಿಗಳಿಂದ ಹಿಡಿದು ಮೊಲ, ಕೆಂಜಳಿಲು, ಮುಸಿಯ, ಮಂಗಗಳಂತಹ ಬಗೆಬಗೆಯ ಪ್ರಾಣಿಗಳಿವೆ. ಉರಗ ಮತ್ತು ಪಕ್ಷಿ ಜಾತಿಗಳು ಸಮೃದ್ಧವಾಗಿವೆ. ಇಲ್ಲಿಯ ಸಮುದ್ರಕ್ಕಿಂತಲೂ ಕೆರೆಗಳೇ ಮೀನು ಅಭಿವೃದ್ಧಿಗೆ ಅನುಕೂಲವಾಗಿವೆ. ವಾಯುಗುಣ: ಈ ಜಿಲ್ಲೆಯು ಪಶ್ಚಿಮ ಕರಾವಳಿ ವಾಯುಗುಣದ ಲಕ್ಷಣಗಳನ್ನು ಪಡೆದಿದೆ. ಸಮುದ್ರ ಮಟ್ಟದಿಂದ ಹೆಚ್ಚು ಎತ್ತರವಲ್ಲದ ಭೂಪ್ರದೇಶವೇ ಇಲ್ಲಿ ಅಧಿಕ ಇರುವುದರಿಂದಾಗಿ ವರ್ಷದ ಬಹುಭಾಗ ಮೈಯಲ್ಲಿ ಬೆವರು ಬರಿಸುವ ಉಷ್ಣಾಂಶ ಮತ್ತು ತೇವಾಂಶದಿಂದ ಕೂಡಿದ ಸೆಕೆ ಇರುತ್ತದೆ. ಹಗಲು ರಾತ್ರಿ ಉಷ್ಣಾಂಶ ಏರಿಕೆಯಲ್ಲೇ ಇರುತ್ತದೆ. ಚಳಿಗಾಲದಲ್ಲಿ ಗರಿಷ್ಠ ಉಷ್ಣಾಂಶ ಅಪರೂಪಕ್ಕೆ ೩೮º ಸೆಲ್ಸಿಯಸ್ಗೆ ಹೋದರೆ ಕನಿಷ್ಠ ಉಷ್ಣಾಂಶ ೧೭º ಸೆಲ್ಸಿಯಸ್ ಗೆ ಇಳಿಯುವುದುಂಟು. ಮಾರ್ಚ್ನಿಂದ ಮೇ ತಿಂಗಳ ಅಂತ್ಯದವರೆಗೆ ಕಡುಬೇಸಿಗೆಯಿದ್ದು, ವಿರಳವಾಗಿ ಬಿರುಮಳೆಗಳಾಗುತ್ತವೆ. ಪಶ್ಚಿಮ ಘಟ್ಟದತ್ತ ಹೋದಂತೆಲ್ಲಾ ತಂಪು ಹವೆ ಕಂಡುಬರುತ್ತದೆ. ಜೂನ್ ನಿಂದ ಆರಂಭವಾಗುವ ನೈರುತ್ಯ ಮಾರುತದ ಮುಂಗಾರು ಮಳೆಯು ಸೆಪ್ಟೆಂಬರ್ ಅಂತ್ಯದವರೆಗೆ ತೀಕ್ಷ್ಣವಾಗಿರುತ್ತದೆ. ಈ ಅವಧಿಯಲ್ಲಿ ಭಾರಿ ಮಳೆಯಾಗುತ್ತದೆ. ರಾಜ್ಯದ ಹೆಚ್ಚು ಮಳೆ ಬೀಳುವ ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆಯೂ ಒಂದು. ವಾರ್ಷಿಕವಾಗಿ ಸರಾಸರಿ ೩೫೦೦-೪೦೦೦ಮಿಮೀ ಮಳೆಯಾಗುವ ಸಂಭವವಿದೆ. ಅಕ್ಟೋಬರ್ ನಿಂದ ಮಳೆ ವಿರಳವಾಗುತ್ತಾ ಬರುತ್ತದೆ. ಡಿಸೆಂಬರ್ ನಿಂದ ಫೆಬ್ರವರಿಯವರೆಗಿನ ಚಳಿಗಾಲದ ತಿಂಗಳುಗಳಲ್ಲಿ ಉಷ್ಣಾಂಶ ಕಡಿಮೆ ಕೆಲವು ವರ್ಷಗಳಲ್ಲಿ ಅತ್ಯಧಿಕ ಮಳೆಯಾದ ದಾಖಲೆ ಈ ಜಿಲ್ಲೆಗಿದೆ. ೧೯೬೧ ರಲ್ಲಿ ಉಡುಪಿ ಮತ್ತು ಕಾರ್ಕಳ ಪಟ್ಟಣಗಳಲ್ಲಿ ಅನುಕ್ರಮವಾಗಿ ೬೩೩೫ ಮತ್ತು ೬೪೬೪ ಮಿಮೀ. ಅಧಿಕ ಮಳೆಯಾದ ದಾಖಲೆ ಇದೆ. ವ್ಯವಸಾಯ ಕರ್ನಾಟಕದ ಇತರ ಜಿಲ್ಲೆಗಳಂತೆಯೇ ಇಲ್ಲಿಯೂ ವ್ಯವಸಾಯವೇ ಆರ್ಥಿಕತೆಯ ಬೆನ್ನೆಲುಬು. ಸು. ೧,೨೨,೧೩೨ ಹೆಕ್ಟೇರು ಬಿತ್ತನೆ ಪ್ರದೇಶವಿದೆ. ಇದು ವರ್ಷದಲ್ಲಿ ನಾಲ್ಕು ತಿಂಗಳು ಅಧಿಕ ಮಳೆ ಬೀಳುವ ಪ್ರದೇಶವಾಗಿರುವುದರಿಂದ ಇಲ್ಲಿ ನೀರಾವರಿ ಬೆಳೆಗಳೇ ಹೆಚ್ಚು. ಒಟ್ಟು ೧೧,೧೭೮ ಹೆಕ್ಟೇರುಗಳಿಗೆ ನೀರಾವರಿ ಪೂರೈಕೆಯಿದೆ. ಕಾಲುವೆ ನೀರಾವರಿಯಿಲ್ಲ. ಏತ ನೀರಾವರಿ (೩೭೧೭ ಹೆ) ಮತ್ತು ಬಾವಿ ನೀರಾವರಿ (೪೫೧೪ ಹೆ.) ವಿಧಗಳು ಪ್ರಮುಖ, ಇವು ಶೇ.೭೫ ಭಾಗ ನೀರಾವರಿ ಸೌಲಭ್ಯ ಕಲ್ಪಿಸುತ್ತವೆ. ಅಲ್ಲದೆ ಕೆರೆ ನೀರಾವರಿ (೧೫೩೨ಹೆ.) ಹಾಗೂ ಇತರೆ (೧೨೦೧ಹೆ.) ನೀರಾವರಿ ವಿಧಾನಗಳಿಂದಲೂ ಸೌಕರ್ಯ ಪಡೆಯಲಾಗುವುದು. ಭತ್ತ ಪ್ರಮುಖ ಆಹಾರ ಬೆಳೆ. ಇಲ್ಲಿ ಬತ್ತದ ಗದ್ದೆಗಳನ್ನು ಅವುಗಳ ಸನ್ನಿವೇಶಕ್ಕನುಗುಣವಾಗಿ ವಿಂಗಡಿಸುತ್ತಾರೆ. ಕೊಳಕ ಗದ್ದೆ, ಬೈಲು ಗದ್ದೆ ಮತ್ತು ಪಟ್ಲ್‌ ಗದ್ದೆಗಳೆಂದು ಅವನ್ನು ಕರೆಯಲಾಗುತ್ತದೆ. ಕೆಲವೆಡೆ ಬೇಸಿಗೆ ಬೆಳೆ ಬೆಳೆಯುವುದುಂಟು. ವಾಣಿಜ್ಯ ಬೆಳೆಗಳಲ್ಲಿ ತೆಂಗು ಮುಖ್ಯವಾದುದು. ಸಮುದ್ರತೀರದಲ್ಲಿ ಮತ್ತು ಒಳನಾಡಿನಲ್ಲಿ ವ್ಯಾಪಕವಾಗಿ ತೆಂಗಿನಮರಗಳಿವೆ. ಬೆಟ್ಟದ ತಪ್ಪಲಲ್ಲಿ ಮೆಣಸು ಮತ್ತು ಏಲಕ್ಕಿ ವಾಣಿಜ್ಯ ಬೆಳೆಗಳು. ನೀರಾವರಿ ಅನುಕೂಲವಿರುವ ಹೆಚ್ಚಿನ ಭಾಗಗಳಲ್ಲಿ ಅಡಕೆ ತೋಟಗಳಿವೆ. ಹೊಸ ಹೊಸ ಬೇಸಾಯ ವಿಧಾನಗಳಿಂದ ಮತ್ತು ಹೊಸ ತಳಿಗಳ ಹಾಗೂ ಬೆಳೆಗಳ ಪ್ರಯೋಗದಿಂದ ಇಂದು ಇಲ್ಲಿನ ವ್ಯವಸಾಯಕ್ಷೇತ್ರ ವೈವಿಧ್ಯ ಮಯವಾಗಿದೆ. ಅಲ್ಲಲ್ಲಿ ರಾಗಿ, ಉದ್ದು, ಹೆಸರು, ಹುರುಳಿ, ಅವರೆ, ಗೆಣಸು, ಪರಂಗಿ ಬೆಳೆಯಲಾಗುತ್ತದೆ. ಕಬ್ಬು, ಗೋಡಂಬಿ, ಮೆಣಸಿನಕಾಯಿ, ಸಪೋಟ, ಮಾವು, ಹಲಸು, ಬಾಳೆಗಳ ಸಾಗುವಳಿಯೂ ಉಂಟು. ಈಚಿನ ದಶಕಗಳಲ್ಲಿ ತಾಳೆ ಮರಗಳನ್ನು ಬೆಳೆಯುವುದು ಪ್ರಾರಂಭವಾಗಿದೆ. ಈ ಜಿಲ್ಲೆಯಲ್ಲಿ ಕೆರೆ ನೀರಾವರಿ ಕಡಿಮೆ. ಇಲ್ಲಿ ಅನೇಕ ಸಣ್ಣ ದೊಡ್ಡ ಕೆರೆಗಳಿವೆ. ಕುಂದಾಪುರ ತಾಲ್ಲೂಕಿನ ಚಂತರ ಮಡಗ ಮತ್ತು ಮರನಾಡ ಮಡಗ ಎಂಬ ಕೆರೆಗಳು ನೀರಾವರಿಗೆ ಹೆಚ್ಚು ಉಪಯುಕ್ತ ವಾಗಿವೆ. ಕಾರ್ಕಳದ ಬಳಿಯ ರಾಮಸಾಗರ ದೊಡ್ಡದು. ಜಿಲ್ಲೆಯಲ್ಲಿ ಒಟ್ಟು ೯೭,೨೫೮ ಜನ ಸಾಗುವಳಿದಾರರಿದ್ದಾರೆ. ೮೭,೭೬೧ ಕೃಷಿಕಾರ್ಮಿಕರಿದ್ದಾರೆ (೨೦೦೧). ಭತ್ತ ಅತಿ ವಿಸ್ತಾರ ಪ್ರದೇಶದಲ್ಲಿ ಬೆಳೆಯುವ ಬೆಳೆ (೬೨,೨೯೦ ಹೆ). ಗೇರು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ೨೦೫೫೭ ಹೆಕ್ಟೇರುಗಳಲ್ಲಿ ಬೆಳೆಯುತ್ತಾರೆ. ತರುವಾಯದ ಸ್ಥಾನವನ್ನು ತೆಂಗು (೧೪೮೪೪ ಹೆ), ದ್ವಿದಳ ಧಾನ್ಯ (೭೬೮೪ ಹೆ) ಮತ್ತು ಅಡಕೆ (೮೪೧೯ ಹೆ), ಮೆಣಸು (೨೩೨ ಹೆ) ಬೆಳೆಗಳು ಪಡೆದಿವೆ. ಮೀನುಗಾರಿಕೆ ಉಡುಪಿ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಲ್ಲಿ ಮೀನುಗಾರಿಕೆ ಗಮನಾರ್ಹ ಸ್ಥಾನ ಪಡೆದಿದೆ. ಈ ಜಿಲ್ಲೆ ಪಾರಂಪರಿಕವಾಗಿ ಮೀನುಗಾರಿಕೆಗೆ ಹೆಸರಾದುದು. ಹಿಂದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ೧೪೧ಕಿಮೀ ತೀರಪ್ರದೇಶವಿತ್ತು. ಈಗ ಉಡುಪಿ ಜಿಲ್ಲೆಯಲ್ಲಿ ಹಿಂದಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶೇ.60ರಷ್ಟು ಉದ್ದದ ಕರಾವಳಿ ಈ ಜಿಲ್ಲೆಗೆ ಸೇರಿದೆ. ದಕ್ಷಿಣದ ಯರಮಾಲುವಿನಿಂದ ಉತ್ತರದ ಬೈಂದೂರಿನವರೆಗೂ ಅನೇಕ ಮೀನುಗಾರಿಕೆ ಕೇಂದ್ರಗಳಿವೆ. ಅವುಗಳಲ್ಲಿ ಉಡುಪಿ ಬಳಿ ಇರುವ ಮಲ್ಪೆಯಲ್ಲಿ ಮತ್ತು ಕುಂದಾಪುರದ ದಡಗಳಲ್ಲಿ ಮತ್ಸ್ಯೋದ್ಯಮ ಹೆಚ್ಚಾಗಿ ಬೆಳೆದಿದೆ. ಹಿಂದೆ ಸಮುದ್ರದಲ್ಲಿ ಮೀನು ಹಿಡಿಯುವುದು ಒಂದು ಉಪಜೀವನ ವೃತ್ತಿಯಾಗಿತ್ತು. ಮೀನುಗಾರರು ತಮ್ಮ ಸೀಮಿತ ಸಾಮಗ್ರಿ ಸಲಕರಣೆಗಳ ನೆರವಿನಿಂದ ದೋಣಿಗಳಲ್ಲಿ ಹೋಗಿ ಮೀನುಗಳನ್ನು ಹಿಡಿಯುತ್ತಿದ್ದರು. ಈಗ ಆಧುನಿಕ ಯಂತ್ರಚಾಲಿತ ಮೋಟಾರು ದೋಣಿಗಳು ಮತ್ತು ಸುಧಾರಿತ ಬಲೆಗಳು ಲಭ್ಯವಿವೆ. ಮೀನುಗಾರಿಕೆಯ ವಿಧಾನ ಹೆಚ್ಚು ವೈಜ್ಞಾನಿಕವಾಗಿದೆ. ಆದ್ದರಿಂದ ಸಮುದ್ರದಲ್ಲಿ ದೂರದ ಆಳ ಕಡಲಿನಲ್ಲಿ ಸಾಗಿ ಮೀನನ್ನು ಹಿಡಿದು ತರುತ್ತಾರೆ. ಇಂದು ಮೀನು ಮಾತ್ರವಲ್ಲದೆ ಏಡಿ, ಸೀಗಡಿ ಚಿಪ್ಪು ಹಾಗೂ ಹವಳ ಸಂಗ್ರಹಣೆಯೂ ಮೀನುಗಾರಿಕೆಯ ಅಂಗವಾಗಿ ಬೆಳೆದಿದೆ. ಇಲ್ಲಿ ಹಿಡಿಯುವ ಮೀನುಗಳಲ್ಲಿ ಬಂಗಡೆ ಅಥವಾ ಬಗ್ಗಡೆ ಪ್ರಸಿದ್ಧ ವಾದುದು. ಅದು ಈ ತೀರದಲ್ಲಿ ಯಥೇಚ್ಫವಾಗಿ ದೊರಕುತ್ತದೆ. ಮಾಂಸ ಹಾಗೂ ರುಚಿಯ ದೃಷ್ಟಿಯಿಂದ ಇದು ಜನಪ್ರಿಯ. ಇದಲ್ಲದೆ ಭೂತಾಯಿ ಎಂಬ ಚಿಕ್ಕಮೀನು ಇಲ್ಲಿ ಹೆಚ್ಚಾಗಿ ಸಿಗುತ್ತದೆ. ಸಾರ್ಡೀಶ್ ಮೀನುಗಳನ್ನು ಹೆಚ್ಚಾಗಿ ಎಣ್ಣೆ ತೆಗೆಯಲು ಬಳಸುತ್ತಾರೆ. ನದಿ ಮುಖದ ಹಿನ್ನೀರಿನಲ್ಲೂ ಒಳನಾಡಿನ ನದಿ ಕೆರೆಗಳಲ್ಲೂ ಸಾಕಷ್ಟು ಮೀನು ಲಭ್ಯವಿದೆ. ಈಗ ಮೀನುಸಾಕಣೆ ಒಂದು ಮುಖ್ಯ ಉದ್ಯಮ. ಮೀನನ್ನು ಸಂಸ್ಕರಿಸುವ, ಒಣಗಿಸುವ, ಡಬ್ಬಕ್ಕೆ ತುಂಬುವ ಮತ್ತು ಕೆಡದಂತೆ ರಕ್ಷಿಸುವ ಉದ್ಯಮಗಳೂ ಇಲ್ಲಿ ಬೆಳೆದಿವೆ. ಇದರಿಂದ ಅನೇಕರಿಗೆ ಉದ್ಯೋಗ ದೊರಕಿದೆ. ಮೀನುಗಾರಿಕೆ ವರ್ಷಪೂರ್ತಿ ನಡೆಯುವ ಉದ್ಯೋಗವಲ್ಲ. ಸೆಪ್ಟೆಂಬರ್ ತಿಂಗಳಿನಿಂದ ಫೆಬ್ರವರಿಯವರೆಗೂ ಚಟುವಟಿಕೆ ಚುರುಕಾಗಿರುತ್ತದೆ. ಮುಂದೆ ಏಪ್ರಿಲ್ ವರೆಗೂ ಕಡಿಮೆ. ಮೇ-ಆಗಸ್ಟ್‌ವರೆಗೆ ಸಮುದ್ರದಲ್ಲಿ ಮೀನು ಹಿಡಿಯಲಾಗುವುದಿಲ್ಲ. ಮುಂಗಾರಿನ ತೀವ್ರತೆಯ ಕಾರಣ ಈ ಅವಧಿಯಲ್ಲಿ ಮೀನುಗಾರರು ಬಹುತೇಕ ನಿರುದ್ಯೋಗಿಗಳಾಗಿರುತ್ತಾರೆ. ಈಗ ಸೀಗಡಿಗಳಿಗೆ ವಿಶ್ವ ಮಾರುಕಟ್ಟೆ ಯಲ್ಲಿ ಬೇಡಿಕೆ ಹೆಚ್ಚಿದೆ. ಸೀಗಡಿಗಳನ್ನು ಹಿಡಿಯುವ, ಸಾಕಿ ಬೆಳೆಸುವ ಕಾಯಕಕ್ಕೆ ಈಗ ಪ್ರಾಮುಖ್ಯತೆ ಬಂದಿದೆ. ವಾರ್ಷಿಕವಾಗಿ ಸಾಗರೋತ್ಪನ್ನವಾಗಿ ಹಿಡಿದ ಮೀನಿನ ಪ್ರಮಾಣ 70388 (2006) ಟನ್ಗಳು. ಸಿಹಿ ನೀರು ಮೀನು 82.68 ಟನ್ಗಳು (2006). ಮೋಗವೀರ ಆರಾಧ್ಯ ದೈವ ನಂಬಿ ಮೀನುಗಾರಿಕೆ ನಡೆಸುತ್ತಾರೆ ಖನಿಜ ಸಂಪತ್ತು ಪಶ್ಚಿಮ ಘಟ್ಟಗಳ ಶ್ರೇಣಿಯಲ್ಲಿ ಕಬ್ಬಿಣದ ಅದಿರು ಹೇರಳವಾಗಿದೆ. ಕೊಡಚಾದ್ರಿಯ ಬಳಿ ಈ ಅದಿರನ್ನು ತೆಗೆಯಲಾಗುತ್ತದೆ. ಕುಂದಾಪುರ ತಾಲ್ಲೂಕಿನಲ್ಲಿ ಉತ್ತಮ ದರ್ಜೆಯ ಬಾಕ್ಸೈಟ್ ಇದೆ. ಸುಣ್ಣದ ಚಿಪ್ಪು, ಸಿಲಿಕ ಮರಳು, ಸಿಲಿಮನೈಟ್, ಸೋಪುಕಲ್ಲು, ಹಂಚಿನ ತಯಾರಿಕೆಯ ಮಣ್ಣು-ಇವು ಜಿಲ್ಲೆಯ ವಿವಿಧ ಭಾಗಗಳಲ್ಲಿ ದೊರೆಯುತ್ತವೆ. ಕಾಪು, ಪಡುಬಿದರೆ, ಉದ್ಯಾವರ ಮೊದಲಾದೆಡೆಗಳಲ್ಲಿ ಅಭ್ರಕದಿಂದ ಕೂಡಿದ ಬೆಣಚುಕಲ್ಲಿನ ಶಿಲೆಗಳಿವೆ. ಮಲ್ಪೆ ಬಳಿ ಹೆಂಚು ತಯಾರಿಕೆಗೆ ಉಪಯುಕ್ತವಾದ ಮಣ್ಣು ದೊರೆಯುತ್ತದೆ. ಕೈಗಾರಿಕೆ ಉಡುಪಿ ಜಿಲ್ಲೆ ಕೈಗಾರಿಕಾಪ್ರಧಾನ ಜಿಲ್ಲೆಯಲ್ಲ. ಸಣ್ಣ ಕೈಗಾರಿಕೆ, ವ್ಯಾಪಾರ ಮತ್ತು ಇತರ ವ್ಯವಸಾಯೇತರ ಚಟುವಟಿಕೆಗಳಲ್ಲಿ ತೊಡಗಿರುವವರ ಪ್ರಮಾಣ ಜಿಲ್ಲೆಯ ಒಟ್ಟು ಜನಸಂಖ್ಯೆಯ ಸುಮಾರು ಶೇ.೪೦ ರಷ್ಟು . ಮೀನುಗಳ ಸಂಸ್ಕರಣೆ, ವ್ಯಾಪಾರ, ವಿದೇಶಗಳಿಗೆ ರಫ್ತು ಮಾಡುವುದು ಮುಂತಾದ ಕಾರ್ಯಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ತೊಡಗಿದ್ದಾರೆ. ಮಲ್ಪೆ, ಕುಂದಾಪುರ, ಕೋಡಿ ಮೊದಲಾದವು ಈ ಚಟುವಟಿಕೆಗಳ ಕೇಂದ್ರಗಳಾಗಿವೆ. ನಿಸರ್ಗಸಂಪನ್ಮೂಲಗಳನ್ನು ಬಳಸಿಕೊಂಡು ಅನೇಕ ಉದ್ಯಮಗಳು ತಲೆ ಎತ್ತಿವೆ. ಅವುಗಳಲ್ಲಿ ಹಂಚಿನ ಕಾರ್ಖಾನೆಗಳು ಮುಖ್ಯವಾದವು. ಕುಂದಾಪುರ ಮತ್ತು ಉಡುಪಿಯಲ್ಲಿ ಈ ಕಾರ್ಖಾನೆಗಳು ಹೆಚ್ಚಾಗಿ ನೆಲೆಸಿವೆ. ವಿಶ್ವಪ್ರಸಿದ್ಧವಾದ ಮಂಗಳೂರು ಹಂಚುಗಳು ಇಲ್ಲಿಂದ ರಫ್ತಾಗುತ್ತವೆ. ಮನೆಗಳಲ್ಲಿ ಮತ್ತು ಕಟ್ಟಡಗಳಲ್ಲಿ ಬಳಸುವ ಮೊಸಾಯಿಕ್ ಹಂಚುಗಳು ಈಗೀಗ ಹೆಚ್ಚಾಗಿ ತಯಾರಾಗುತ್ತವೆ. ಮನೆಗಳ ಗೋಡೆಗಳನ್ನು ಕಟ್ಟಲು ಬಳಸುವ ಜಂಬಿಟ್ಟಿಗೆ ಕಲ್ಲು ಜಿಲ್ಲೆಯಲ್ಲಿ ಹೇರಳವಾಗಿ ಸಿಗುತ್ತವೆ. ಇದನ್ನು ಇಟ್ಟಿಗೆ ಮಾಡಿ ಘಟ್ಟದ ಮೇಲಿನ ಪಟ್ಟಣಗಳಿಗೆ ಮತ್ತು ಗ್ರಾಮಗಳಿಗೆ ಕಳುಹಿಸಲಾಗುತ್ತದೆ. ಇತ್ತೀಚೆಗೆ ಹೆಚ್ಚಾಗಿ ತೆಂಗಿನ ನಾರಿನಿಂದ ಹಗ್ಗ, ಜಮಖಾನೆ, ಕಾಲೊರೆಸುವ ತಾಟು ಮೊದಲಾದವನ್ನು ತಯಾರಿಸಲಾಗುತ್ತಿದೆ. ಇದೊಂದು ಮುಖ್ಯ ಗೃಹಕೈಗಾರಿಕೆಯಾಗಿ ಬೆಳೆದಿದೆ. ಉದ್ಯಾವರ, ಪಡುಬಿದ್ರಿ, ಕಲ್ಯಾಣಪುರಗಳಲ್ಲಿ ಈ ಚಟುವಟಿಕೆಗಳು ಹೆಚ್ಚು. ಇಲ್ಲಿ ಅರಣ್ಯ ಪ್ರದೇಶ ಸಾಕಷ್ಟಿರುವುದರಿಂದ ಮರ, ಬೆತ್ತ, ಬಿದಿರುಗಳನ್ನು ಬಳಸಿ ವಿವಿಧ ಪೀಠೋಪಕರಣಗಳು, ಕುಕ್ಕೆಗಳು, ಚಾಟುಗಳು, ಮಳೆಗಾಲದಲ್ಲಿ ತಲೆಯ ಮೇಲೆ ಹಾಕಿಕೊಳ್ಳುವ ಗೊರಗಗಳು, ಗೋಡೆಗಳ ನಿರ್ಮಾಣಕ್ಕೆ ಬಳಸುವ ಬಿದಿರಿನ ತಡಿಕೆಗಳು ಮೊದಲಾದವನ್ನು ತಯಾರಿಸಲಾಗುತ್ತದೆ. *ಕಾಡಿನಲ್ಲಿ ದೊರೆಯುವ ಈಚಲಿನಿಂದ ಮತ್ತು ದೊಡ್ಡ ಹುಲ್ಲಿನಿಂದ ಚಾಪೆ ತಯಾರು ಮಾಡುತ್ತಾರೆ. ವ್ಯವಸಾಯ ಸಂಬಂಧವಾದ ಇನ್ನೂ ಹಲವಾರು ಉದ್ಯಮಗಳು ಜಿಲ್ಲೆಯಲ್ಲಿವೆ. ಕೊಬ್ಬರಿಯಿಂದ ಎಣ್ಣೆತೆಗೆಯುವ ಗಿರಣಿಗಳು, ಅಕ್ಕಿಗಿರಣಿಗಳು, ಗೋಡಂಬಿ ಸಂಸ್ಕರಣ ಘಟಕಗಳು, ಗೋಡಂಬಿ ಯ ಓಟೆಯಿಂದ ಎಣ್ಣೆ ತಯಾರಿಸುವ ಗಿರಣಿಗಳು, ಬೆಲ್ಲ ತಯಾರಿಕೆಯ ಘಟಕಗಳು-ಇವು ಮುಖ್ಯವಾದವು. ಬೀಡಿ ಕಟ್ಟುವುದು ಒಂದು ಹಳೆಯ ಉದ್ಯಮ. ಇದು ಕರಾವಳಿಯ ಊರುಗಳಲ್ಲಿ ಅಭಿವೃದ್ಧಿ ಹೊಂದಿದೆ. ಕಾರ್ಕಳ ಉಡುಪಿಗಳಲ್ಲಿ ಬೀಡಿ ತಯಾರಿಕೆ ಕಾರ್ಖಾನೆಗಳಿವೆ. ಕೈ ಮಗ್ಗದ ಬಟ್ಟೆಗಳು,ಲುಂಗಿಗಳು ಚೌಕಗಳು ಮೊದಲಾದ ವನ್ನು ತಯಾರಿಸುವ ಉದ್ಯಮಗಳು ಉಡುಪಿ, ಬ್ರಹ್ಮಾವರ ಮುಂತಾದ ಕಡೆಗಳಲ್ಲಿವೆ. ಮಣಿಪಾಲ, ಉಡುಪಿ, ಕುಂದಾಪುರ, ಪಟ್ಟಣಗಳು ಆಧುನಿಕ ಕೈಗಾರಿಕೆಗಳಲ್ಲಿ ಮುಂದುವರೆದಿವೆ. ಉಕ್ಕಿನ ಉಪಕರಣಗಳು ಮೋಟಾರುವಾಹನದ ಬಿಡಿಭಾಗಗಳು, ಲೋಹದ ಪಾತ್ರೆಗಳು ಮುಂತಾದವುಗಳ ತಯಾರಿಕೆ, ತಂತಿ ತಯಾರಿಕೆ ಮತ್ತು ವಿದ್ಯುತ್ ಉಪಕರಣಗಳ ತಯಾರಿಕೆಗೆ ಸಂಬಂಧಿಸಿದ ಕಾರ್ಖಾನೆಗಳು ಇಲ್ಲಿವೆ. ಮುದ್ರಣ, ಪತ್ರಿಕೋದ್ಯಮಗಳಿಗೆ ಮಣಿಪಾಲ ಎತ್ತಿದ ಕೈ, ಉದಯವಾಣಿ ಪತ್ರಿಕೆ, ರೂಪತಾರ, ತರಂಗ ಎಂಬ ನಿಯತಕಾಲಿಕ ಗಳು ಇಲ್ಲಿಂದ ಮುದ್ರಿತವಾಗಿ ಹೊರಬರುತ್ತವೆ. ಮಣಿಪಾಲದ ಮುದ್ರಣಾಲಯ ವಿಶ್ವವಿಖ್ಯಾತವಾದುದು. ಮರಗೆಲಸ, ಕಬ್ಬಿಣದ ಕೆಲಸ. ಚಿನ್ನದ ಕೆಲಸ, ಚರ್ಮ ಕೈಗಾರಿಕೆ, ರಬ್ಬರ್ ಸಂಸ್ಕರಣ ಮುಂತಾದವುಗಳಲ್ಲಿ ಸಾವಿರಾರು ಜನ ದುಡಿಯುತ್ತಿದ್ದಾರೆ. ಗಂಗೊಳ್ಳಿ, ಬೈಂದೂರು, ಮಲ್ಪೆ, ಹಂಗಾರಕಟ್ಟೆ ಬಂದರುಗಳು ಜನರಿಗೆ ಉದ್ಯೋಗ ಒದಗಿಸಿವೆ. ಜಿಲ್ಲೆಯಲ್ಲಿ ಒಟ್ಟು ೬೭೭೨ ವಿವಿಧ ಬಗೆಯ ಮಧ್ಯಮ ಮತ್ತು ಸಣ್ಣ ಪ್ರಮಾಣದ ಉದ್ಯಮಗಳು ಸ್ಥಾಪನೆಗೊಂಡಿದ್ದು ಅವುಗಳಲ್ಲಿ ೪೩೩೭೫ ಉದ್ಯೋಗಿಗಳು ಕೆಲಸ ಮಾಡುತ್ತಾರೆ. ಮಧ್ಯಮ ಪ್ರಮಾಣದ ಉದ್ಯಮಗಳ ಸಂಖ್ಯೆ ೨೭೦ (೨೦೦೬). ಎರಡು ಜವಳಿ ಉದ್ದಿಮೆ, ೩ ರಾಸಾಯನಿಕ ಕೈಗಾರಿಕೆ ಮತ್ತು ೨ ಸಕ್ಕರೆ ಕಾರ್ಖಾನೆಗಳಿವೆ. ಉಡುಪಿ ಜಿಲ್ಲೆಯ ಮಲ್ಲಿಗೆ ಮತ್ತು ಸೀರೆಗಳಿಗೆ ಭೌಗೋಲಿಕ ಗುರುತಿನ (geological identification) ಟ್ಯಾಗ್ ದೊರೆತಿದೆ. ಅಷ್ಟ ಮಠಗಳು ಉಡುಪಿಯ ಕೇಂದ್ರಬಿಂದುವಾದ ಕೃಷ್ಣ ಮಠವನ್ನು ಅಷ್ಟ ಮಠಗಳು ನಡೆಸುತ್ತವೆ. ಅಷ್ಟ ಮಠಗಳು ಕೆಳಕಂಡಂತಿವೆ: ಫಲಿಮಾರು ಅದಮಾರು ಸೋದೆ ಕೃಷ್ಣಾಪುರ ಪುತ್ತಿಗೆ ಶಿರೂರು ಕಾಣಿಯೂರು ಪೇಜಾವರ ಉಡುಪಿ ಶೈಲಿಯ ಅಡುಗೆ ಉಡುಪಿ ಶೈಲಿಯ ಅಡುಗೆ ವಿಶ್ವವಿಖ್ಯಾತ. ಉಡುಪಿ ಹೋಟೆಲ್‌ಗಳೂ ವಿಶ್ವದಾದ್ಯಂತ ಪ್ರಸಿದ್ಧ. ಉಡುಪಿ ಶೈಲಿಯ ಪಾಕಶಾಸ್ತ್ರ, ವಿದೇಶಗಳಲ್ಲೂ ಪ್ರಸಿದ್ಧ. ಕೃಷ್ಣ ದೇವರಿಗೆ ಪ್ರತಿದಿನವೂ ಬೇರೆ ಬೇರೆ ರೀತಿಯ ಅಡುಗೆ ಮಾಡುತ್ತಾರೆ. ಚಾತುರ್ಮಾಸದ (ಮಳೆಗಾಲದ ನಾಲ್ಕು ತಿಂಗಳ ಅವಧಿ) ಸಮಯದಲ್ಲಿ ತಯಾರಿಸಲಾಗುವ ಅಡುಗೆಗಳಿಗೆ ಕೆಲವು ನಿರ್ಬಂಧಗಳಿವೆ. ಈ ನಿರ್ಬಂಧಗಳು ಹಾಗೂ ಅವಶ್ಯಕತೆಗಳು, ಆ ಸಮಯದಲ್ಲಿ ಸಿಗುವ ಹಾಗು ಹತ್ತಿರದಲ್ಲೇ ಸಿಗುವ ವಸ್ತುಗಳನ್ನು ಉಪಯೋಗಿಸಿ. ಹೊಸ ಹೊಸ ಅಡುಗೆ ಪ್ರಯೋಗಗಳಿಗೆ ದಾರಿ ಮಾಡಿದುವು. ಕೃಷ್ಣ ದೇವರಿಗೆ ಅಡುಗೆ ಮಾಡುವ ಶಿವಳ್ಳಿ ಬ್ರಾಹ್ಮಣರು ಈ ಅಡುಗೆ ಶೈಲಿಯನ್ನು ಸೃಷ್ಟಿಸಿದರು. ಇಂದು ದಕ್ಷಿಣಭಾರತದಾದ್ಯಂತ ಉಡುಪಿ ಜಿಲ್ಲೆಯವರು ನಡೆಸುವ ಹೋಟೆಲ್ ಗಳು "ಉಡುಪಿ ಹೋಟೆಲ್'ಎಂಬ ಹೊಸ ಬ್ರಾಂಡ್ ನ್ನು ಸೃಷ್ಟಿಸಿವೆ. ಬೆಂಗಳೂರಿನ ಎಂ.ಟಿ.ಆರ್. ಸಹಾ ಮೂಲತ: ಉಡುಪಿ ಅಡುಗೆಯ ಶೈಲಿಯಿಂದ ರೂಪುಗೊಂಡಿದ್ದು, ಈಗ ಸಿದ್ದ ಆಹಾರಗಳ ತಯಾರಿಯಲ್ಲೂ ಹೆಸರಾಗಿದೆ. ಸಾರಿಗೆ ರಾಷ್ಟ್ರೀಯ ಹೆದ್ದಾರಿ ೧೭ ಉಡುಪಿಯ ಮೂಲಕ ಹಾದುಹೋಗುತ್ತದೆ. ಕಾರ್ಕಳಕ್ಕೆ, ಧರ್ಮಸ್ಥಳಕ್ಕೆ ಹಾಗೂ ಶಿವಮೊಗ್ಗಕ್ಕೆ ಶೃಂಗೇರಿಗೆ ಹೋಗುವ ರಾಜ್ಯ ಹೆದ್ದಾರಿಗಳು ಉಡುಪಿಯನ್ನು ಸಂಪರ್ಕಿಸುವ ಬೇರೆ ಮುಖ್ಯ ರಸ್ತೆಗಳು. ರಾಷ್ಟೀಯ ಹೆದ್ದಾರಿ ೧೭ ಮಂಗಳೂರು ಹಾಗೂ ಕಾರವಾರವನ್ನು ಸಂಪರ್ಕಿಸುತ್ತದೆ. ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳು ಉಡುಪಿಯಿಂದ ಕರ್ನಾಟಕದ ವಿವಿಧ ಪ್ರದೇಶಗಳಿಗೆ ಹೋಗುತ್ತವೆ. ಕೊಂಕಣ ರೈಲೂ ಸಹಾ ಉಡುಪಿಯ ಮಾರ್ಗವಾಗಿ ಹೋಗುತ್ತದೆ. ಸುಮಾರು ೫೦ ಕಿ.ಮೀ. ದೂರದಲ್ಲಿರುವ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣವು ಉಡುಪಿಯ ಹತ್ತಿರದ ವಿಮಾನ ನಿಲ್ದಾಣ. ಉಡುಪಿ ಜಿಲ್ಲೆಯ ಒಂದು ಬದಿಯಲ್ಲಿ ಸಮುದ್ರವೂ ಇನ್ನೊಂದು ಬದಿಯಲ್ಲಿ ಎತ್ತರದ ಘಟ್ಟಗಳೂ ಇವೆ. ಒಳನಾಡು ಚಿಕ್ಕ ದೊಡ್ಡ ಅಸಂಖ್ಯಾತ ನದಿಕೊಳ್ಳಗಳಿಂದ ಕೂಡಿದ ಭೌಗೋಳಿಕ ಸನ್ನಿವೇಶವು ಭೂಸಾರಿಗೆಗೆ ಅಷ್ಟೇನೂ ಅನುಕೂಲಕರವಾಗಿಲ್ಲ. ಹಿಂದೆ ಗಾಡಿ ರಸ್ತೆಗಳು ಹೆಚ್ಚಾಗಿದ್ದವು. ಆಧುನಿಕವಾದ ರಸ್ತೆಗಳು ಹೆಚ್ಚಾಗಿರಲಿಲ್ಲ. ಅವು ಮಳೆಗಾಲದಲ್ಲಿ ಬಹುತೇಕ ಸಂಚಾರಕ್ಕೆ ನಿರುಪಯುಕ್ತವಾಗಿರುತ್ತಿದ್ದವು. ಜಿಲ್ಲೆಯ ಭೌಗೋಳಿಕ ಮಹತ್ತ್ವ ಮತ್ತು ಬಂದರುಗಳಿಂದಾಗಿ ಬ್ರಿಟಿಷ್ ಸರ್ಕಾರ ಕೆಲವು ಘಾಟಿ ಮಾರ್ಗಗಳನ್ನು ಅಭಿವೃದ್ಧಿಪಡಿಸಿತು. ಇದರಿಂದ ಜಿಲ್ಲೆಯೊಂದಿಗೆ ಒಳನಾಡಿನ ಸಂಪರ್ಕ ಬೆಳೆಯಲು ಸಹಾಯವಾಯಿತು. ಕೊಲ್ಲೂರು ಸಮೀಪದಲ್ಲಿ ಹಾದು ಹೋಗುವ ಉಡುಪಿ-ಸಾಗರ ರಸ್ತೆ ಶಿವಮೊಗ್ಗ ಜಿಲ್ಲೆಯ ಮೂಲಕ ಉತ್ತರ ಕರ್ನಾಟಕ ಭಾಗಕ್ಕೆ ಸಂಪರ್ಕ ಕಲ್ಪಿಸುವ ಘಾಟಿ ರಸ್ತೆ, ಉಡುಪಿ-ಆಗುಂಬೆ-ಶಿವಮೊಗ್ಗ ರಸ್ತೆ ಇತ್ತೀಚಿನವರೆಗೂ ದೊಡ್ಡ ವಾಹನಗಳ ಸಂಚಾರಕ್ಕೆ ಅನುಕೂಲಕರವಾಗಿರಲಿಲ್ಲ. ಉಡುಪಿ-ಕಾರ್ಕಳ-ದಕ್ಷಿಣಕನ್ನಡದ ಎಲ್ಲೆ ಮತ್ತು ಶೃಂಗೇರಿ ರಸ್ತೆ ಉತ್ತಮ ಸ್ಥಿತಿಯಲ್ಲಿರುವ ಘಾಟಿಮಾರ್ಗ; ಇದು ಕುದುರೆಮುಖ ಗಣಿ ಪ್ರದೇಶಕ್ಕೂ ಸಂಪರ್ಕ ಕಲ್ಪಿಸುತ್ತದೆ. ಉಡುಪಿ-ಶಂಕರ ನಾರಾಯಣ-ಹೊಸಂಗಡಿ-ಹುಲಿಕಲ್ ಮೂಲಕ ಇನ್ನೊಂದು ಘಾಟಿ ಮಾರ್ಗ ಶಿವಮೊಗ್ಗ ಜಿಲ್ಲೆ ತಲುಪುತ್ತದೆ. ಉಡುಪಿ, ಭಟ್ಕಳ ರಸ್ತೆಯು ರಾಷ್ಟ್ರೀಯ ಹೆದ್ದಾರಿ. ಇದು ಉತ್ತರ ಕನ್ನಡ ಜಿಲ್ಲೆಯ ಮೂಲಕ ಹಾದು ಹೋಗುತ್ತದೆ. ಉಡುಪಿ-ಮಂಗಳೂರು ಮಾರ್ಗವೂ ರಾಷ್ಟ್ರೀಯ ಹೆದ್ದಾರಿಯ ಭಾಗವಾಗಿದೆ. 143ಕಿಮೀ ರಾಷ್ಟ್ರೀಯ ಹೆದ್ದಾರಿ, 353 ಕಿಮೀ ರಾಜ್ಯ ಹೆದ್ದಾರಿ, 735 ಕಿಮೀ ಮುಖ್ಯ ಜಿಲ್ಲಾರಸ್ತೆಗಳು. ಒಟ್ಟು 1230 ಕಿಮೀಗಳ ರಸ್ತೆಗಳ ಉದ್ದವಿದೆ. ಇದರಲ್ಲಿ 1209 ಪಕ್ಕರಸ್ತೆ, 24 ದೊಡ್ಡ ಸೇತುವೆಗಳಿವೆ. ಈಚಿನ ದಶಕಗಳಲ್ಲಿ ಇಲ್ಲಿನ ನದಿಗಳು ಮತ್ತು ಉಪನದಿಗಳಿಗೆ ಅನೇಕ ಸೇತುವೆಗಳನ್ನು ಕಟ್ಟಿದ್ದರಿಂದ ಒಳನಾಡಿನ ಸಂಪರ್ಕ ವ್ಯವಸ್ಥೆ ಉತ್ತಮಗೊಂಡಿದೆ. ಉಡುಪಿ-ಕಾರ್ಕಳ-ಬೆಳ್ತಂಗಡಿ ರಸ್ತೆ ಚಾರ್ಮಾಡಿ ಘಾಟ್ ರಸ್ತೆಗೆ ಸಂಪರ್ಕ ಕಲ್ಪಿಸುತ್ತವೆ. ತಿರುವನಂತಪುರ ಮುಂಬಯಿ-ಕೊಂಕಣ ರೈಲು ಮಾರ್ಗ ಇಲ್ಲಿಯ ಏಕೈಕ ರೈಲ್ವೆ ಸಂಪರ್ಕವ್ಯವಸ್ಥೆ ಇದರಿಂದ ಬೈಂದೂರು, ಕುಂದಾಪುರ, ಉಡುಪಿ, ಹಂಗಾರಕಟ್ಟೆ ಮೊದಲಾದ ತೀರದ ಪಟ್ಟಣಗಳಿಂದ ಭಾರತದ ಇತರ ಭಾಗಗಳಿಗೆ ರೈಲು ಸಂಪರ್ಕ ಒದಗಿಬಂದಿದೆ. ಜಿಲ್ಲೆಯ ಒಟ್ಟು ರೈಲು ಮಾರ್ಗದ ಉದ್ದ 49 ಕಿ.ಮೀ.ಗಳು. ಜಲಸಾರಿಗೆಗೆ ಜಿಲ್ಲೆಯಲ್ಲಿ ಹೆಚ್ಚಿನ ಪ್ರಾಮುಖ್ಯ. ಕರಾವಳಿಯ ಬಂದರುಗಳಿಗೆ ಮತ್ತು ಪಟ್ಟಣಗಳಿಗೆ ದೋಣಿಗಳು ಸ್ಟೀಮರ್ ಗಳು ಮತ್ತು ಸಣ್ಣ ಹಡಗುಗಳ ಮೂಲಕ ಜನ ಸಂಚಾರ ಮತ್ತು ಸಾಮಗ್ರಿಗಳ ಸಾಗಣೆ ನಡೆಯುತ್ತದೆ. ನದಿ ಮುಖಗಳು ಹಿನ್ನೀರು ದೋಣಿ ಸಂಚಾರಕ್ಕೆ ಅನುಕೂಲವಾಗಿವೆ. ಆಧುನಿಕ ದೂರಸಂಪರ್ಕ ವ್ಯವಸ್ಥೆ ಬಳಕೆಯಲ್ಲಿದೆ. ವಾಣಿಜ್ಯ ಹಾಗೂ ಉದ್ದಿಮೆ ಉಡುಪಿಯು ಕರ್ನಾಟಕದ ಒಂದು ಮುಖ್ಯ ನಗರವಾಗಿ ಬೆಳೆಯುತ್ತಿದೆ. ಒಂದು ಖಾಸಗೀ ಸಂಸ್ಥೆಯ ಸಮೀಕ್ಷೆಯ ಪ್ರಕಾರ ಬೆಂಗಳೂರು ಹಾಗೂ ಮಂಗಳೂರಿನ ನಂತರ ಉಡುಪಿಯ ಒಬ್ಬ ವ್ಯಕ್ತಿಯ ಸರಾಸರಿ ಆದಾಯವು ಮೂರನೇ ಸ್ಥಾನದಲ್ಲಿದೆ. ಉಡುಪಿಯ ವಾಣಿಜ್ಯವು ಮುಖ್ಯವಾಗಿ ಕೃಷಿ ಹಾಗೂ ಮೀನುಗಾರಿಕೆಯನ್ನು ಅವಲಂಬಿಸಿದೆ. ಗೇರು, ಬೇರೆ ತರಹದ ಆಹಾರ, ಹಾಲಿನಂತಹ ಸಣ್ಣ ಪ್ರಮಾಣದ ಉದ್ದಿಮೆಗಳು ಇತರ ಮುಖ್ಯ ಉದ್ದಿಮೆಗಳು. ಉಡುಪಿ ಜಿಲ್ಲೆಯ ಶಂಕರಪುರವು ಮಲ್ಲಿಗೆ ಕೃಷಿಗೆ ಹೆಸರುವಾಸಿಯಾಗಿದೆ. ಉಡುಪಿಯಲ್ಲಿ ದೊಡ್ಡ ಪ್ರಮಾಣದ ಉದ್ದಿಮೆಗಳು ಇಲ್ಲ. ಉಷ್ಣ ವಿದ್ಯುತ್ ಸ್ಥಾವರವನ್ನು ನಿರ್ಮಿಸಲು ಕರ್ನಾಟಕ ಸರಕಾರವು ಕೋಜೆಂಟ್ರಿಕ್ಸ್ ಜೊತೆ ಒಪ್ಪಂದವನ್ನು ಮಾಡಿಕೊಂಡಿತ್ತು. ಆದರೆ ಉಡುಪಿ ಜನರ ಹಾಗೂ ಪರಿಸರವಾದಿ ಸಂಘಟನೆಗಳ ತೀವ್ರ ವಿರೋಧವಿದ್ದಾಗಲೂ ನಾಗಾರ್ಜುನ ಕಂಪನಿ ನಂದಿಕೂರಿನ ಬಳಿ ಉಷ್ಣ ವಿದ್ಯುತ್ ಸ್ತಾವರವನ್ನು ನಿರ್ಮಿಸಿದೆ. ಪಡುಬಿದರೆಯ ಬಳಿ ಇದೇ ತರಹದ ವಿದ್ಯುತ್ ಸ್ಥಾವರವನ್ನು ನಿರ್ಮಾಣ ಮಾಡಲು ನಾಗಾರ್ಜುನ ವಿದ್ಯುತ್ ಸಂಸ್ಥೆಯ ಪ್ರಯತ್ನವೂ ತೀವ್ರ ವಿರೋಧದಿಂದಾಗಿ ಸ್ಥಗಿತಗೊಂಡಿದೆ. ಸುಜಲಾನ್ ಗಾಳಿ ವಿದ್ಯುತ್ ತಯಾರಿಕಾ ಕೇಂದ್ರವೂ ಉಡುಪಿಯಲ್ಲಿ ನಿರ್ಮಾಣವಾಗಿದೆ. ಇದರಲ್ಲಿ ಭೂಮಿ ಕಳೆದುಕೊಂಡವರ ಜೊತೆಗೆ ಪರಿಸರವಾದಿಗಳು ತೀವ್ರವಾದ ವಿರೋಧ ವ್ಯಕ್ತಪಡಿಸುತ್ತಾರೆ. ವಿಂಡೊಸ್ ಹಾಗೂ Mac OS ಗಳಲ್ಲಿ ಕೆಲಸ ಮಾಡುವ ಪ್ರಖ್ಯಾತ software ಕಂಪೆನಿಯಾದ ರೊಬೊಸಾಫ್ಟ್ ಉಡುಪಿಯಲ್ಲೇ ಹುಟ್ಟಿ ಬೆಳೆದ ಕಂಪೆನಿ. ಈ ಕಂಪೆನಿಯು ಉಡುಪಿಗೆ IT ಜಗತ್ತಿನಲ್ಲಿ ಉತ್ತಮ ಸ್ಥಾನವನ್ನು ತಂದು ಕೊಟ್ಟಿದೆ. ಉಡುಪಿ ಜಿಲ್ಲೆ ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯ ತವರು. ಇಲ್ಲಿ 20ನೆಯ ಶತಮಾನದಲ್ಲಿ ಸ್ಥಾಪಿತವಾದ ಬ್ಯಾಂಕಿಂಗ್ ಸಂಸ್ಥೆಗಳು ಹಲವು. 1906ರಷ್ಟು ಹಿಂದೆಯೇ ಕೆನರಾಬ್ಯಾಂಕ್ ಅಸ್ತಿತ್ವಕ್ಕೆ ಬಂದಿತು. ಅನಂತರ ಬಂದ ಹಲವಾರು ಬ್ಯಾಂಕ್ ಗಳಲ್ಲಿ ಕೆಲವು ಉಳಿದಿವೆ. ಮತ್ತು ಅಂತಾರಾಷ್ಟ್ರೀ ಯ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ಬ್ಯಾಂಕ್ ಗಳು ಉಡುಪಿ ಮತ್ತು ಮಂಗಳೂರು ಮೂಲದವು. ಅವುಗಳಲ್ಲಿ - ಕೆನರಾ ಬ್ಯಾಂಕ್ ಅಲ್ಲದೆ ಸಿಂಡಿಕೇಟ್ ಬ್ಯಾಂಕ್, (ಈಗ ಕೆನರಾ ಬ್ಯಾಂಕ್ ಜೊತೆಗೆ ವಿಲೀನವಾಗಿದೆ) ವಿಜಯಾ ಬ್ಯಾಂಕ್ (೧೯೩೧), ಕರ್ನಾಟಕ ಬ್ಯಾಂಕ್ ೧೯೨೪), ಕಾರ್ಪೊರೇಷನ್ ಬ್ಯಾಂಕ್-ಇವು ಪ್ರಮುಖವಾದವು. ಜಿಲ್ಲೆಯಲ್ಲಿ ೨೧೭ ವಾಣಿಜ್ಯ ಬ್ಯಾಂಕುಗಳು, ೧೧ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ೩೦ ನಗರ ಸಹಕಾರಿ ಬ್ಯಾಂಕುಗಳು, ೭ ವ್ಯವಸಾಯ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳು ಮತ್ತು ೮೯೩ ಕೃಷಿ ಸಾಲ ಹಾಗೂ ಇತರ ಸಹಕಾರ ಸಂಘಗಳಿವೆ (೨೦೦೬). ಉಡುಪಿಯಲ್ಲಿ ಬಹಳಷ್ಟು ವ್ಯಾಪಾರ ಕೇಂದ್ರಗಳಿವೆ. ಉದಾಹರಣೆಗಳು ರಥಬೀದಿಯಲ್ಲಿರುವ ಸಂಪೂರ್ಣ, ಗೀತಾಂಜಲಿ ಚಿತ್ರಮಂದಿರದ ಹತ್ತಿರದ Little ಪೈ, ಕವಿ ಮುದ್ದಣ್ಣ ಮಾರ್ಗದಲ್ಲಿರುವ ಡಯಾನ ಸ್ಟೋರ್ಸ್,ಕಡಿಯಾಳಿಯ ಪಕ್ಕದಲ್ಲಿ ಮೋರ್. ಹೊಸದಾಗಿ ಶುರುವಾಗಿದೆ. ಉಡುಪಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳೆಂದರೆ, ಅಡಿಕೆ, ಗೋಡಂಬಿ, ರಬ್ಬರ್, ತೆಂಗು ಇತ್ಯಾದಿ. ಹಲವಾರು ಗೋಡಂಬಿ ಸಂಸ್ಕ್ರರಣಾ ಕಾರ್ಖಾನೆಗಳು ಈ ಜಿಲ್ಲೆಯಲ್ಲಿವೆ.ಉಡುಪಿಯ ಆಭರಣಗಳು ಹಾಗೂ ಕಲೆ ವಿಶ್ವ ಪ್ರಸಿದ್ಧ. ಮೇ ತಿಂಗಳಲ್ಲಿ ಬರುವ ಅಕ್ಷಯ ತದಿಗೆಯ ದಿನ ಜನರು ಬಹಳಷ್ಟು ಆಭರಣಗಳನ್ನು ಖರೀದಿಸುತ್ತಾರೆ. ಆಭರಣ ಹಾಗೂ ಸ್ವರ್ಣ ಇಲ್ಲಿಯ ಪ್ರಸಿದ್ಧ ಚಿನ್ನದ ಅಂಗಡಿಗಳು. ಕಲೆ ಹಾಗೂ ಸಂಸ್ಕೃತಿ ಉಡುಪಿಯ ಸಂಸ್ಕೃತಿಯಲ್ಲಿ ಭೂತ ಕೋಲ, ಆಟಿ ಕಳಂಜ, ಕರಂಗೋಲು ,ಪಾಣಾರಾಟ ಹಾಗೂ ನಾಗಾರಾಧನೆ ಒಳಗೊಂಡಿವೆ. ಇಲ್ಲಿಯ ಜನರು ಆಚರಿಸುವ ಕೆಲವು ಪ್ರಮುಖ ಹಬ್ಬಗಳಲ್ಲಿ ದೀಪಾವಳಿ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ , ನವರಾತ್ರಿ, ದಸರಾ, ರಂಜಾನ್, ಹಾಗೂ ಕ್ರಿಸ್ಮಸ್ ಒಳಗೊಂಡಿವೆ. ಸಾಂಸ್ಕೃತಿಕ ಕಲೆಯಾದ ಯಕ್ಷಗಾನ, ನಾಟಕ, ಭರತನಾಟ್ಯ ತುಂಬಾ ಪ್ರಸಿಧ್ಧ. ಕಳೆದ ಐದುವರೆ ದಶಕಗಳಿಂದ ನಾಟಕ ರಂಗದಲ್ಲಿ ಸಕ್ರಿಯವಾಗಿರುವ, ದೇಶ ವಿದೇಶಗಳಲ್ಲಿ ನಾಟಕ ಪ್ರದರ್ಶನ ನೀಡುವ, ಸತತವಾಗಿ ನಾಲ್ಕು ದಶಕಗಳಿಂದ ರಾಜ್ಯದ ಮಟ್ಟದ ಕನ್ನಡ ನಾಟಕ ಸ್ಪರ್ಧೆಯನ್ನು ನಡೆಸುತ್ತಿರುವ, ರಾಜ್ಯದ ಅತ್ಯಂತ ಪ್ರಮುಖ ಹವ್ಯಾಸಿ ರಂಗತಂಡವಾದ ರಂಗಭೂಮಿ (ರಿ.) ಉಡುಪಿ, ರಥಬೀದಿ ಗೆಳೆಯರು,ಸುಮನಸಾ ಕೊಡವೂರು ಎಂಬ ಸಂಸ್ಥೆಗಳು ಉಡುಪಿಯ ಸಂಸ್ಕೃತಿಯನ್ನು ಉಳಿಸಲು ಬಹಳಷ್ಟು ಕೆಲಸವನ್ನು ಮಾಡುತ್ತಿದೆ.ಕುಂದಾಪುರದ ರಂಗ ಅಧ್ಯಯನ ಕೇಂದ್ರ, ಲಾವಣ್ಯ ಬೈಂದೂರು, ಸುರಭಿ ಬೈಂದೂರು, ಅಮೋಘ ಹಿರಿಯಡಕ, ಭೂಮಿಕಾ ಹಾರಾಡಿ, ಸಂಗಮ ಕಲಾವಿದರು ಮಣಿಪಾಲ,ಭೂಮಿಗೀತ ಪಟ್ಲ,ವನಸುಮ ವೇದಿಕೆ,ನವಸುಮ ರಂಗತಂಡ ಜಿಲ್ಲೆಯ ಪ್ರಮುಖ ಹವ್ಯಾಸಿ ರಂಗತಂಡಗಳು. ಉಡುಪಿ ಜಿಲ್ಲೆಯಾದ್ಯಂತ ಪ್ರಚಲಿತದಲ್ಲಿರುವ ವಿಶ್ವವಿಖ್ಯಾತ ಕಲೆಯೆಂದರೆ ಯಕ್ಷಗಾನ. ಮುಖ್ಯವಾಗಿ ಬಡಗು ತಿಟ್ಟು ಯಕ್ಷಗಾನ ಇಲ್ಲಿ ಮತ್ತು ನೆರೆಯ ಉತ್ತರಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡಿಕೊಂಡಿದೆ. ದೇವರ ಸೇವೆಯ ರೂಪದಲ್ಲಿ ಆರಂಭಗೊಂಡ ಈ ಕಲೆಯು ೨೦ ನೆಯ ಶತಮಾನದ ಉತ್ತರಾರ್ಧದಲ್ಲಿ ವಾಣಿಜ್ಯ ರೂಪವನ್ನು ಪಡೆದುಕೊಂಡು, ನಾಟಕಗಳ ರೀತಿ ಟಿಕೇಟು ಮೂಲಕ ನೋಡುವಂತಹ ಕಲೆಯಾಗಿ ರೂಪುಗೊಂಡಿದೆ. ಈ ಜಿಲ್ಲೆಯ ಸಾಲಿಗ್ರಾಮ ಮೇಳ, ಪೆರ್ಡೂರು ಮೇಳ, ಅಮೃತೇಶ್ವರಿ ಮೇಳ, ಹಾಲಾಡಿ ಮೇಳ, ಮಂದಾರ್ತಿ ಮೇಳ, ಕಮಲಶಿಲೆ ಮೇಳ, ಮಾರಣಕಟ್ಟೆ ಮೇಳ, ಸೌಕೂರು ಮೇಳ, ಸಾಲಿಗ್ರಾಮ ಮಕ್ಕಳ ಮೇಳ ಮೊದಲಾದವುಗಳು ಇಲ್ಲಿನ ಯಕ್ಷಗಾನದ ನಂಟನ್ನು ಋಜುವಾತುಪಡಿಸುತ್ತವೆ. ಯಕ್ಷಗಾನದ ವೃತ್ತಿ ಕಲಾವಿದರಿಗೆ ಹೊಸ ಚೈತನ್ಯ ನೀಡುತ್ತಿರುವ ಯಕ್ಷಗಾನ ಕಲಾರಂಗ, ದೇಶ ವಿದೇಶಗಳಲ್ಲಿ ಪ್ರಖ್ಯಾತಿಯನ್ನು ಗಳಿಸಿರುವ ಯಕ್ಷಗಾನದ ಪಾರಂಪರಿಕ ಶಿಕ್ಷಣ ನೀಡುವ ಯಕ್ಷಗಾನ ಕೇಂದ್ರ ಇಲ್ಲಿಯ ಮೆರುಗು. ತುಳು ರಂಗಭೂಮಿಯಲ್ಲಿ ಇತ್ತೀಚೆಗೆ ಸಾಕಷ್ಟು ಬದಲಾವಣೆ ಗಳು,ಹೊಸತನ ಬಂದಿದೆ. ಕಾಪುವಿನ 'ರಂಗ ತರಂಗ' ಎಂಬ ಸಕ್ರಿಯ ನಾಟಕ ತಂಡವು 'ತಿಲಕೆ ತಿರ್ಗಯೆ','ಪಿರ ಬನ್ನಗ','ಆಯೆ ಸುಬಗೆ' ಮುಂತಾದ ನಾಟಕಗಳನ್ನು ಉಡುಪಿ ಜಿಲ್ಲೆಯಾದ್ಯಂತ ಹಾಗೂ ದ.ಕ.,ಮುಂಬಯಿಗಳಲ್ಲಿ ಆಡಿ ತೋರಿಸಿ ಪ್ರಸಿದ್ದಿ ಗಳಿಸಿದೆ. ಅದಲ್ಲದೆ ದಿ.ಬಾಲಕೃಷ್ಣ ಪೈ ಯವರ 'ಮೂರು ಮುತ್ತು', ಸಾಸ್ತಾನದ ಸಾಧನಾ ಕಲಾವಿದರು, ಕಟಪಾಡಿಯ ರಂಜನಾ ಕಲಾವಿದರು ಮುಂತಾದ ರಂಗಭೂಮಿ ನಾಟಕ ತಂಡಗಳು ಉಡುಪಿ ಜಿಲ್ಲೆಯಲ್ಲಿವೆ. ಕೊಳಿ ಅಂಕ ಕೂಡಾ ಒಂದು ಜನಪದ ಕ್ರೀಡೆ ಪಾರಂಪರಿಕವಾದ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯವನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳು ನಡೆದಿವೆ. ಉಡುಪಿಯ ಜಾನಪದ ಅಧ್ಯಯನ ಕೇಂದ್ರ (RRC) ದೇಶಕ್ಕೇ ಪ್ರಖ್ಯಾತ. ಕೆರೋಡಿ ಸುಬ್ಬರಾವ್, ಮುದ್ದಣ, [[ಗೋವಿಂದ ಪೈ https://kn.wikipedia.org/s/31t |ಎಂ. ಗೋವಿಂದಪೈ]], ಪಂಜೆ ಮಂಗೇಶರಾವ್, ಕಡೇಕಾರು ರಾಜಗೋಪಾಲ, ಕೃಷ್ಣರಾಯ, ಎಂ.ಎನ್. ಕಾಮತ್, ಉಗ್ರಾಣ ಮಂಗೇಶರಾವ್, ಉಲ್ಲಾಳ ಮಂಗೇಶ್ರಾವ್, ಪೇಜಾವರ ಸದಾಶಿವರಾವ್, ಶಿವರಾಮ ಕಾರಂತ, ಸೇಡಿಯಾಪು ಕೃಷ್ಣಭಟ್ಟ, ಎಂ. ಮರಿಯಪ್ಪ ಭಟ್ಟ , ಡಾ.ಬನ್ನಂಜೆ ಗೋವಿಂದಾಾಚಾರ್ಯ ಮೊದಲಾದದ ಸಾಹಿತ್ಯ ಶ್ರೇಷ್ಠರ ಕಾರ್ಯಕ್ಷೇತ್ರ ಇದು. ಕೆ.ಕೆ. ಹೆಬ್ಬಾರರಂತಹ ಮಹಾಚಿತ್ರಕಲಾವಿದರ ಮೂಲ ಇಲ್ಲಿಯದು. ರಂಜಾಲ ಗೋಪಾಲಶೆಣೈರ ಶಿಷ್ಯರ ವಿಕ್ರಮಶಿಲ್ಪ ಕಾರ್ಯಾಗಾರವಿದೆ. ಭರತ ನಾಟ್ಯ, ಯಕ್ಷಗಾನ ಹಾಗೂ ವಿವಿಧ ನೃತ್ಯಗಳನ್ನು ಕಲಿಸುವ ಮತ್ತು ಕಲಾವಿದರ ಸಂಸ್ಥೆಗಳು ಇಲ್ಲಿ ಬೇರುಬಿಟ್ಟಿವೆ. ಫೋಕಲ್ ಫೋಟೋಕ್ಲಬ್‍ನಂತಹ ಛಾಯಾಗ್ರಹಣ ಕಲೆ, ಆರ್ಟಿಸ್ಟ್ ಫೋರಂ ಅಂತಹ ಚಿತ್ರ ಕಲೆ ರೂಢಿಸುವ ಸಂಸ್ಥೆಗಳಿವೆ. ಉಡುಪಿ ಜಿಲ್ಲೆ ಮತ್ತು ಪಟ್ಟಣ ಇಂತಹ ಕಲಾಸಂಪತ್ತು ಜೀವಂತವಾಗಿರಲು ಸಾಕಷ್ಟು ಕಾಣಿಕೆ ಸಲ್ಲಿಸಿವೆ. ಕೋಳಿಅಂಕ, ಕಂಬಳ ಮೊದಲಾದ ಗ್ರಾಮೀಣ ಪಂದ್ಯಗಳು ಇಂದಿಗೂ ನಡೆದುಬಂದಿವೆ. ಪಿಲಿ ಏಸ: ಪಿಲಿ ಏಸ ನವರಾತ್ರಿ ಸಮಯದಲ್ಲಿ ಕ೦ಡು ಬರುವ ಆಚರಣೆಯಾಗಿದೆ. ಮೈ ಮೇಲೆ ಹುಲಿಯ೦ತೆ ಬಣ್ಣ ಮತ್ತು ಬಟ್ಟೆ ಧರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುತ್ತದೆ. ಉಡುಪಿ ತಾಲ್ಲೂಕು ವಿಸ್ತೀರ್ಣ ೯೨೯ಚ.ಕಿಮೀ. ಜನಸಂಖ್ಯೆ 529225 (2001). ಉತ್ತರದಲ್ಲಿ ಕುಂದಾಪುರ, ದಕ್ಷಿಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆ. ಪೂರ್ವದಲ್ಲಿ ಕಾರ್ಕಳ ತಾಲ್ಲೂಕುಗಳಿಂದಲೂ ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದಲೂ ಸುತ್ತುವರೆದಿದೆ. ಕಾಪು, ಕೋಟ, ಉಡುಪಿ ಮತ್ತು ಬ್ರಹ್ಮಾವರ ಹೋಬಳಿ ಗಳು. ಈ ತಾಲ್ಲೂಕಿನಲ್ಲಿ 4 ಪಟ್ಟಣಗಳು ಮತ್ತು 99 ಗ್ರಾಮಗಳು ಇವೆ. ಪಶ್ಚಿಮ ಕರಾವಳಿಯಲ್ಲಿದ್ದು ಸಸ್ಯಸಮೃದ್ಧವಾಗಿರುವ ಈ ತಾಲ್ಲೂಕಿನಲ್ಲಿ ಸಾಗರಿಕ ವಾಯುಗುಣವಿದೆ. ನೈರುತ್ಯ ಮಾರುತಗಳಿಂದ ಸಾಕಷ್ಟು ಮಳೆ ಬೀಳುತ್ತದೆ. ವಾರ್ಷಿಕ ಸರಾಸರಿ 4188ಮಿಮೀ. ಪಶ್ಚಿಮ ಘಟ್ಟದಲ್ಲಿ ಹುಟ್ಟುವ ಅನೇಕ ತೊರೆಗಳು ಹಾಗೂ ಸೀತಾ ಮತ್ತು ಸ್ವರ್ಣ ನದಿಗಳು ಪಶ್ಚಿಮಾಭಿಮುಖವಾಗಿ ಹರಿಯುತ್ತವೆ. ಈ ತಾಲ್ಲೂಕಿನಲ್ಲಿ 4686 ಹೆಕ್ಟೇರ್ ಗಳಷ್ಟು ಕಾಡು ಪ್ರದೇಶವಿದೆ. ಕಾಡಿನಲ್ಲಿ ಕರಿಮರ, ಮಾವು, ಮತ್ತಿ, ಕಿರಲಬೋಗಿ ಮತ್ತು ಬೆನ್ ಟೀಕ್ ಮುಂತಾದ ಮರಗಳು ಬೆಳೆಯುವುದಲ್ಲದೆ ಹುಣಸೆ, ಸೀಗೇಕಾಯಿ, ಬಿದಿರು ಈ ಉಪಯುಕ್ತ ವಸ್ತುಗಳೂ ದೊರೆಯುತ್ತವೆ. ಸ್ವಲ್ಪ ಮೆಣಸಿನ ಬೆಳೆಯೂ ಇದೆ. ಉಡುಪಿ ತಾಲ್ಲೂಕಿನಲ್ಲಿ ದೊಡ್ಡ ನೀರಾವರಿ ಯೋಜನೆಗಳಿಲ್ಲ. ಆದರೆ ಸಾಕಷ್ಟು ಮಳೆ ಬೀಳುವುದರಿಂದ ನದಿ-ತೊರೆಗಳು ಇದ್ದು ಜಲಾಭಾವವಿಲ್ಲ. ಈ ತಾಲ್ಲೂಕಿನ ಚಂತರ ಮಡಗ ಮತ್ತು ಮರನಾಡ ಮಡಗ ಕೆರೆಗಳಿಂದ 370 ಎಕರೆಗಳಿಗೆ ನೀರೊದಗುತ್ತದೆ. ತಾಲ್ಲೂಕಿನಲ್ಲಿ ಪರ್ಷಿಯನ್ ಚಕ್ರ ಅಥವಾ ಪಂಪ್ಸೆಟ್ ಇರುವ, ಕಪಿಲೆ ಮತ್ತು ಇನ್ನಿತರ ನೀರಾವರಿ ಬಾವಿಗಳಿವೆ. ತಾಲ್ಲೂಕಿನ ತೀರದ ಉದ್ದಕ್ಕೂ ಮತ್ತು ಸ್ವಲ್ಪ ಒಳಭಾಗದಲ್ಲೂ ಜಂಬು ಮಣ್ಣನ್ನು (ಲ್ಯಾಟರೈಟ್) ಕಾಣಬಹುದು. ಇಲ್ಲಿನ ಕಲ್ಲುಗಳು ಹೆಚ್ಚು ಒತ್ತಾಗಿದ್ದು ಪುಡಿಪುಡಿಯಾಗುವ ಕೆಂಪು ಜೇಡಿ ಮಣ್ಣನ್ನು ಒಳಗೊಂಡಿದೆ. ಚಿಪ್ಪು ಸುಣ್ಣ ಕಲ್ಲಿನ ಮತ್ತು ಜೇಡಿಮಣ್ಣಿನ ಸಂಗ್ರಹವೂ ಇದೆ. ನದಿ ಕಣಿವೆಗಳ ಉದ್ದಕ್ಕೂ ನಾನಾ ಬಣ್ಣದ ಜೇಡಿಮಣ್ಣು ಮೆಕ್ಕಲು ಮಣ್ಣಿನೊಡನೆ ಇರುವುದನ್ನು ಕಾಣಬಹುದು. ಕಟ್ಟಡ ಕಲ್ಲುಗಳು ಇದ್ದು-ಅಲಿಯೂರು, ಶಿರ, ಪಾಡು, ಕಡವೂರು ಮತ್ತು ಹರಡಿಯಲ್ಲಿ ಕಲ್ಲುಚಪ್ಪಡಿ ತೆಗೆಯುತ್ತಾರೆ. ಈ ತಾಲ್ಲೂಕಿನ 59.34 ಹೆಕ್ಟೇರುಗಳಲ್ಲಿ ಚಿಪ್ಪು ಸುಣ್ಣವನ್ನು ಸಂಗ್ರಹಿಸುತ್ತಾರೆ. ಶುದ್ಧ ಬಿಳುಪಿನಿಂದ ಬೂದ ಮಿಶ್ರಿತ ಬಿಳಿ ರೀತಿಗಳ ಸಿಲಿಕ ಮರಳು ಹರಹುಗಳು ತೀರದ ಉದ್ದಕ್ಕೂ ಮುಳೂರು, ಕಾಪು, ಹೆಜಮಾಡಿ, ತೋನ್ಸೆ ಮತ್ತು ಉಳಿಯಾರಗೋಳಿ ಮುಂತಾದೆಡೆಗಳಲ್ಲಿ 30ಸೆ.ಮೀ. ನಿಂದ 1ಮೀ ಮಂದದಲ್ಲಿ ಹರಡಿವೆ. 12,000 ಟನ್ ಸಿಲಿಕ ಮರಳನ್ನು ಪ್ರತಿವರ್ಷ ಈ ಪ್ರದೇಶದಿಂದ ತೆಗೆದು ಬಳಸಿಕೊಳ್ಳಲಾಗುತ್ತಿದೆ. ಅಭ್ರಕದಿಂದ ಕೂಡಿದ ಬೆಣಚುಕಲ್ಲಿನ ಶಿಲೆಯನ್ನು ಈ ತಾಲ್ಲೂಕಿನ ಕಾಪು, ಪಡು, ಮೂಳೂರು, ಉಳಿಯಾರಗೋಳಿ, ಉದ್ಯಾವರ, ನಡಸಾಲು ಮತ್ತು ಹೆಜಮಾಡಿಗಳಲ್ಲಿ ಕಾಣಬಹುದು. ಹಂಚು ತಯಾರಿಕೆಗೆ ಬೇಕಾದಂಥ ವಿಶಿಷ್ಟವಾದ ಮಣ್ಣು ಈ ತಾಲ್ಲೂಕಿನ ಮಲ್ಪೆ ಮುಂತಾದೆಡೆ ದೊರೆಯುತ್ತದೆ. ಬತ್ತ, ಕಬ್ಬು ಮತ್ತು ನೆಲಗಡಲೆ ಮುಖ್ಯ ವ್ಯವಸಾಯ ಬೆಳೆಗಳು. ತೆಂಗು, ಅಡಕೆ, ಗೇರು ಮುಖ್ಯ ತೋಟಗಾರಿಕೆ ಬೆಳೆಗಳು 2004-05 ಅಂಕಿ ಅಂಶಗಳ ಪ್ರಕಾರ ಹಣ್ಣುಗಳು 5989 ಹೆ, ಕರಿಮೆಣಸು 50 ಹೆ., ರಬ್ಬರ್ 33, ಹಲಸು 394, ತೆಂಗು (5857), ಕಬ್ಬು (110), ಬತ್ತ (25562), ಗೇರು (4168), ನೆಲಗಡಲೆ (1506), ದ್ವಿದಳ ಧಾನ್ಯಗಳು (5318), ಅಡಕೆ (586), ಬಾಳೆ (338), ಮಾವು (618), ಸಿಹಿ ಗೆಣಸು (217), ಮೊದಲಾದ ಬೆಳೆಗಳು ಬೆಳೆಯುತ್ತಿವೆ. ಇಲ್ಲಿಯ ಜನರ ಮುಖ್ಯ ಕಸಬು ಇಲ್ಲಿಯ ಜನರ ಮುಖ್ಯ ಕಸಬು ವ್ಯವಸಾಯವಾದರೂ ಇತರ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದುತ್ತಿದ್ದಾರೆ. ಸ್ವರ್ಣ ನದಿ ಮತ್ತು ಸೀತಾ ನದಿಗಳಲ್ಲಿ ಹಾಗೂ ಸಮುದ್ರದಲ್ಲಿ ಮೀನು ಹಿಡಿದು ಮತ್ಸ್ಯೊದ್ಯಮವನ್ನೇ ಮುಖ್ಯ ಕಸಬನ್ನಾಗಿ ಮಾಡಿಕೊಂಡಿರುವವರೂ ಇದ್ದಾರೆ. ಈ ತಾಲ್ಲೂಕಿನಲ್ಲಿ ಕೋಳಿಸಾಕಣೆ ಮತ್ತು ಪಶುಪಾಲನೆ ಕೆಂದ್ರಗಳೂ ಇವೆ. ಜಿಲ್ಲೆಯ ಎಲ್ಲ ಕಡೆಗೂ ಉತ್ತಮ ರಸ್ತೆ ಸಂಪರ್ಕವಿದೆ. ಒಟ್ಟು 343 ಪ್ರಾಥಮಿಕ ಶಾಲೆಗಳು 100 ಪ್ರೌಢ ಶಾಲೆಗಳು ಮತ್ತು ಕಾಲೇಜುಗಳೂ ಇವೆ. ಇತರೆ ಸೌಲಭ್ಯಗಳು ಉಡುಪಿಗೆ ಉತ್ತರದಲ್ಲಿ 3 ಕಿಮೀ ದೂರದಲ್ಲಿರುವ ಮಣಿಪಾಲದಲ್ಲಿ ಮಣಿಪಾಲ ಮುದ್ರಣಾಲಯ, ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಶಿಕ್ಷಣ ತರಬೇತಿ ಕಾಲೇಜುಗಳಿವೆ. ಸಿಂಡಿಕೇಟ್ ಬ್ಯಾಂಕ್ ನ ಕೇಂದ್ರ ಕಚೇರಿ ಇದೆ. ಇಲ್ಲಿ ಸ್ಥಾಪಿತವಾಗಿರುವ ದಿ ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಸಂಸ್ಥೆ ವಿದ್ಯಾಪ್ರಸಾರಣಾ ಕಾರ್ಯದಲ್ಲಿ ವಿಶೇಷ ರೀತಿಯ ಸೇವೆ ಸಲ್ಲಿಸುತ್ತಿದೆ. 35 ಪದವಿ ಪೂರ್ವ ಕಾಲೇಜುಗಳು, 4 ಸರ್ಕಾರಿ ಕಾಲೇಜುಗಳೂ ಇವೆ. ಖಾಸಗಿ ಕಾಲೇಜುಗಳು 5, ಮಣಿಪಾಲದಲ್ಲಿ ವೈದ್ಯಕೀಯ 2 ಮತ್ತು ಎಂಜಿನಿಯರಿಂಗ್ 2 ಕಾಲೇಜು ಗಳಿವೆ. ಪಾಲಿಟೆಕ್ನಿಕ್ ಕಾಲೇಜು, 1 ದಂತ ಕಾಲೇಜು ಉದ್ಯಾವರ, ಕಲ್ಯಾಣಪುರ, ತೋನ್ಸೆ, ಪೆರ್ಡೂರು, ಬ್ರಹ್ಮಾವರ, ಬಾರಕೂರು, ಮಂದಾರ್ತಿ - ಇವು ತಾಲ್ಲೂಕಿನ ಕೆಲವು ಮುಖ್ಯ ಸ್ಥಳಗಳು (ಇವುಗಳಿಗೆ ಪ್ರತ್ಯೇಕ ಲೇಖನಗಳಿವೆ). ಉಡುಪಿಗೆ ಹತ್ತಿರವಿರುವ ಕರಂಕರಪಾಡಿಯಲ್ಲಿ ಬೃಹತ್ ಶಿಲಾಯುಗಕ್ಕೆ ಸಂಬಂಧಿಸಿದ ಕೆಲವು ಕುರುಹುಗಳು ಸಿಕ್ಕಿವೆ. ಎಣ್ಣೆ ಹೊಳೆ ಮತ್ತು ಸ್ವರ್ಣನದಿ ಸಂಗಮದಲ್ಲಿರುವ ಭದ್ರಗಿರಿಯಲ್ಲಿ ವಿಠ್ಠಲ ದೇವಾಲಯವಿದೆ. ಕಟಪಾಡಿಯಲ್ಲಿ ಪುರಾತನ ದೇವಾಲಯಗಳಿವೆ. ಕಾಪುವಿನಲ್ಲಿ ಜೈನಬಸದಿ ಮತ್ತು ಮಾರಿಯಮ್ಮನ ಗುಡಿಗಳೂ ಕೋಟದಲ್ಲಿ ನರಸಿಂಹ, ಮಹಾದೇವ ಮತ್ತು ಅಮೃತೇಶ್ವರಿ ದೇವಾಲಯಗಳೂ ಇವೆ. ನಂದಿಕೂರಿನ ಅಮೃತೇಶ್ವರ, ಬಂಟ ಕಲ್ಲಿನಲ್ಲಿ ದುರ್ಗಾಪರಮೇಶ್ವರಿ, ನಾಯಂಪಳ್ಳಿಯ ಗೋಪಾಲಕೃಷ್ಣ, ನೀಲಾವರದ ದುರ್ಗಾ ಭಗವತಿ, ಸಾಲಿಗ್ರಾಮದ ಯೋಗನರಸಿಂಹ ಹೆಸರಿಸಬೇಕಾದ ಇತರ ದೇವಾಲಯಗಳು. ಸುರುಳುವಿನ ಮಹಾದೇವ ದೇವಾಲಯ ಪೂರ್ಣ ಕಪ್ಪು ಶಿಲೆಯಲ್ಲಿ ನಿರ್ಮಿತವಾದುದು. ಅಲೆಮೂರಿನಲ್ಲಿ ದುರ್ಗಾ ಮತ್ತು ಜನಾರ್ದನ ದೇವಾಲಯಗಳಿವೆ. ಈ ಜನಾರ್ದನ ದೇವಾಲಯ ಕದಂಬ ಮಯೂರವರ್ಮ ಕಟ್ಟಿಸಿದ್ದೆಂದು ಪ್ರತೀತಿ. ಚಿತ್ರಪದಿ ದಕ್ಷಿಣ ಕನ್ನಡ ಜಿಲ್ಲೆಯ ಬಲ್ಲಾಳವಂಶದವರ ಮೂಲಸ್ಥಾನ. ಕುಂಜಾರು ಮಧ್ವಾಚಾರ್ಯರು ಹುಟ್ಟಿದ ಸ್ಥಳ. ಇಲ್ಲಿ ಮಹಿಷಾಸುರ ಮರ್ಧಿನಿ ದೇವಾಲಯವೂ ನಾಲ್ಕು ಪುಷ್ಕರಣಿಗಳೂ ಇವೆ. ಹತ್ತಿರದಲ್ಲಿ ಕುಂಜಾರುಗಿರಿ ಮತ್ತು ಪರಶುರಾಮಗಿರಿ ಎಂಬ ಎರಡು ಚಿಕ್ಕ ಬೆಟ್ಟಗಳಿವೆ. ಪರಶುರಾಮಗಿರಿಯ ಮೇಲೆ ಪರಶುರಾಮ ವಿಗ್ರಹವಿದೆ. ಎರ್ಮಾಳಿನಲ್ಲಿ ಒಂದು ಚಂದ್ರನಾಥ ಬಸದಿ ಮತ್ತು ಮಧ್ವಾಚಾರ್ಯರು ಸ್ಥಾಪಿಸಿದ ಜನಾರ್ದನ ದೇವಾಲಯ ಇವೆ. ನಿಡಂಬೂರಿನಲ್ಲಿ ಆಂಜನೇಯ ದೇವಾಲಯವಿದೆ. ಇಲ್ಲಿ ಪ್ರಥಮವಾಗಿ ಪೂಜೆ ಸಲ್ಲಿಸಿದ ಅನಂತರವೇ ಉಡುಪಿಯ ಪರ್ಯಾಯ ಮಠಾಧಿಪತಿಗಳು ತಮ್ಮ ಪೂಜೆಯನ್ನು ಆರಂಭಿಸುವುದು ಪದ್ಧತಿ. ಪಡುಬಿದ್ರಿ ಒಂದು ದೊಡ್ಡ ಊರು, ಮೀನು ವ್ಯಾಪಾರಕ್ಕೆ ಪ್ರಸಿದ್ಧಿ, ಇಲ್ಲಿ ಕೆಲವು ದೇವಾಲಯ(ಶ್ರೀ ಮಹಾ ಗಣಪತಿ ದೇವಸ್ಥಾನ , ಶ್ರೀ ಬ್ರಹ್ಮ ಸ್ಥಾನ ನಾಗ ದೇವಸ್ಥಾನ, ಶ್ರೀ ಗುಡ್ಡೆ ಗಣಪತಿ ದೇವಾಲಯ) ಗಳೂ, ಎರಡು ಪ್ರೌಢಶಾಲೆಗಳೂ ಇವೆ. ಪಟ್ಟಣ ಉಡುಪಿ ಈ ತಾಲ್ಲೂಕಿನಲ್ಲಿ ಆಡಳಿತ ಕೇಂದ್ರ. ಜಿಲ್ಲೆಯ ದೊಡ್ಡ ನಗರ. ಜನಸಂಖ್ಯೆ 113112 (2001). ಮಂಗಳೂರಿಗೆ ಉತ್ತರದಲ್ಲಿ 58 ಕಿಮೀ ದೂರದಲ್ಲಿದ್ದು ಮಂಗಳೂರು, ಕಾರ್ಕಳ, ಕುಂದಾಪುರ ಮುಂತಾದ ಪ್ರದೇಶಗಳೊಡನೆ ಉತ್ತಮ ರಸ್ತೆ ಸಂಪರ್ಕವನ್ನು ಹೊಂದಿದೆ. ಉಡುಪಿಯ ಪಶ್ಚಿಮಕ್ಕೆ 5 ಕಿಮೀ ದೂರದಲ್ಲೇ ಮಲ್ಪೆ ಬಂದರಿದೆ. ಉಡುಪಿ ಪ್ರಸಿದ್ಧ ಧಾರ್ಮಿಕ ಕೇಂದ್ರ ಹಾಗೂ ಯಾತ್ರಾಸ್ಥಳ. ಶಿಕ್ಷಣ, ಕೈಗಾರಿಕೆಗಳಲ್ಲಿ ಸಹ ಪ್ರಗತಿಪಥದಲ್ಲಿರುವ ಊರು. ಶಿಕ್ಷಣ ವ್ಯವಸ್ಥೆ ಲಾ ಕಾಲೇಜು, ಆಯುರ್ವೇದ ಕಾಲೇಜು, ಪೂರ್ಣಪ್ರಜ್ಞಾ ಕಾಲೇಜು, ಮಹಾತ್ಮ ಗಾಂಧಿ ಸ್ಮಾರಕ ಕಾಲೇಜು, ಸಂಗೀತ, ಯಕ್ಷಗಾನ ಇತ್ಯಾದಿಗಳನ್ನು ಕಲಿಸುವ ಲಲಿತಕಲಾ ಕಾಲೇಜು ಮತ್ತು ವೇದ ವೇದಾಂತ ತರ್ಕ ವ್ಯಾಕರಣ ಇತ್ಯಾದಿಗಳನ್ನು ಕಲಿಸುವ ಸಂಸ್ಕೃತ ಮಹಾವಿದ್ಯಾಲಯ, ಎಂ.ಗೋವಿಂದ ಪೈ ಸಂಶೋಧನ ಕೇಂದ್ರ, ಸರ್ಕಾರಿ ಗ್ರಂಥಾಲಯ ಮುಂತಾದವು ಇಲ್ಲಿವೆ. ಏಳು ಪ್ರೌಢ ಶಾಲೆಗಳೂ ಹಲವಾರು ಮಾಧ್ಯಮಿಕ ಪ್ರಾಥಮಿಕ ಶಾಲೆಗಳೂ ಇವೆ. ಒಂದು ಹಂಚು ಕಾರ್ಖಾನೆ ಮತ್ತು ಕೊಬ್ಬರಿ ಎಣ್ಣೆ ಕಾರ್ಖಾನೆಗಳು ಇವೆ. *ಮ್ಯಾಜಿಸ್ಟ್ರೇಟ್ ಮತ್ತು ಮುನ್ಸಿಫ್ ನ್ಯಾಯಾಲಯಗಳಿವೆ. ವ್ಯಾಪಾರೋದ್ಯಮಕ್ಕೆ ಅನುಕೂಲವಾಗುವ ಬಂಡವಾಳವನ್ನೊದಗಿಸುವ ಬ್ಯಾಂಕುಗಳು, ಹಣಕಾಸು, ಸಂಸ್ಥೆಗಳು, ಇಲ್ಲಿವೆ. ಭಾರತ ಜೀವವಿಮಾ ಸಂಸ್ಥೆಯ ವಿಭಾಗ ಕೇಂದ್ರ ಕಚೇರಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಇವೆ. ಅನೇಕ ಸಾಂಸ್ಕೃತಿಕ ಸಂಘ ಸಂಸ್ಥೆಗಳಿವೆ. ಉಡುಪಿಯಲ್ಲಿ ಪುರಸಭೆ ಇದೆ. ನದಿ ನೀರನ್ನು ಕುಡಿಯಲು ಬಳಸಿಕೊಳ್ಳುತ್ತಿದೆ. ಭೌಗೋಳಿಕತೆ 14ನೆಯ ಶತಮಾನದ ತನಕ ಉಡುಪಿ ಎಂಬ ಹೆಸರು ಇಲ್ಲಿನ ಅನಂತೇಶ್ವರ ದೇವಾಲಯದ ಪರಿಸರದಲ್ಲಿ ಒಂದು ಅಗಲ ಕಿರಿದಾದ ಸ್ಥಳಕ್ಕೆ ಮಾತ್ರ ಅನ್ವಯಿಸಿತ್ತು. ಕಾಲಕ್ರಮೇಣ ಈ ಹೆಸರು ವೈಶಾಲ್ಯವನ್ನು ಪಡೆಯಿತು. ಉಡುಪಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಕ್ಕೆ ಶಿವಳ್ಳಿ ಎಂಬ ಹೆಸರು 8ನೆಯ ಶತಮಾನದಿಂದಲೇ ಇತ್ತು. ಇದರ ಸಮೀಪವೇ ಕಕ್ಕುಂಜೆ ಎಂಬಲ್ಲಿ ಬಹು ಪ್ರಾಚೀನವಾದ ಒಂದು ಜನಾರ್ದನ ಬಿಂಬ ಚಿಕ್ಕದಾದೊಂದು ಗುಡಿಯಲ್ಲಿದೆ. ಇತಿಹಾಸ ಕಾಲದಲ್ಲಿ ಉಡುಪಿ-ಶಿವಳ್ಳಿ-ನಿಡಂಬೂರು ಮತ್ತು ಬೆಟ್ಟುಪಾಡಿ ಬೀಡುಗಳು ಎಂಬ ಎರಡು ಪ್ರಮುಖ ವಿಭಾಗಗಳಿಂದ ಕೂಡಿತ್ತು. ಈ ಬೀಡುಗಳ ಅಧಿಕಾರಿಗಳು ಬ್ರಾಹ್ಮಣರಾಗಿದ್ದರು. ಆನಂದಗಿರಿ ವಿರಚಿತ ಶಂಕರ ವಿಜಯದಲ್ಲೂ ಉಡುಪಿ ಮಹಾತ್ಮ್ಯದಲ್ಲೂ ಉಡುಪಿಗೆ ರಜತಪೀಠಪುರವೆಂಬ ಹೆಸರಿದೆ. ಸು.10ನೆಯ ಶತಮಾನದಲ್ಲಿ ಈ ಹೆಸರು ಬಳಕೆಯಲ್ಲಿತ್ತು. ತುಳು ನಾಡಿನ ಸಪ್ತಕ್ಷೇತ್ರಗಳಲ್ಲಿ ರೌಪ್ಯಪೀಠ ಅಥವಾ ರಜತಪೀಠಪುರ ಒಂದಾಗಿದೆ. ಚಂದ್ರ (ಉಡು+ಪಿ) ಶಾಪದಿಂದ ವಿಮೋಚನೆಯನ್ನು ಪಡೆಯುವುದಕ್ಕೋಸ್ಕರ ಶಿವನನ್ನು ಕುರಿತು ತಪ್ಪಸ್ಸು ಮಾಡಿದಾಗ ಶಿವನು ಪ್ರತ್ಯಕ್ಷನಾದ ಸ್ಥಳ ಉಡುಪಿ ಎಂದು ಸ್ಥಳಪುರಾಣದ ಹೇಳಿಕೆ. ಉಡುಪಿ ಶಬ್ದ ನಾಗ ಸಂಬಂಧಿಯೂ ಆಗಿದ್ದುದರಿಂದ ಉಡುಪಿ ನಾಗಾರಾಧನೆಗೆ ಹೆಸರುವಾಸಿ ಯಾದ ಸ್ಥಳವೆನ್ನಬಹುದು. ಇಲ್ಲಿಯ ಬಹು ಪ್ರಾಚೀನ ಚಾರಿತ್ರಿಕ ಅವಶೇಷ ಶ್ರೀ ಅನಂತೇಶ್ವರ ದೇವಾಲಯ, ಸು.8-9ನೆಯ ಶತಮಾನದ್ದು. ಇದು ಗಜಪೃಷಾಕಾರವಾಗಿದ್ದು ಕರ್ನಾಟಕದ ಹಿರಿಯ ದೇವಾಲಯಗಳಲ್ಲಿ ಒಂದೆನ್ನಬಹುದು. ಈ ದೇವಾಲಯದ ಎದುರು ತಗ್ಗಾದ ಸ್ಥಳದಲ್ಲಿ ಚಂದ್ರಮೌಳೀಶ್ವರವೆಂಬ ದೇವಾಲಯವಿದೆ. ಇದು ಸಹ ಸು.9-10ನೆಯ ಶತಮಾನದ ದೇಗುಲ. ಈ ದೇವಾಲಯದ ನಿರ್ಮಾಣಕ್ಕಿಂತ ಮೊದಲು ಇದು ಕೆರೆಯಾಗಿರಬೇಕು. ಇಲ್ಲಿನ ಕೃಷ್ಣದೇವಾಲಯ ಅಖಿಲ ಭಾರತದಲ್ಲೇ ಸಾಕಷ್ಟು ಖ್ಯಾತಿ ಪಡೆದಿದೆ. ಶ್ರೀ ಕೃಷ್ಣಮಠವೆಂದು ಕರೆಯಲ್ಪಡುವ ಈ ದೇವಾಲಯ ಅನಂತೇಶ್ವರ ದೇವಾಲಯದ ಪರಿಸರದಲ್ಲಿ ಈಶಾನ್ಯ ದಿಕ್ಕಿಗಿದೆ. ಈ ಮಠದ ರಚನೆ ಸರಳವಾಗಿದ್ದರೂ ಇದೊಂದು ಆಯುತಾಕಾರದ ಕಟ್ಟಡವಾಗಿದ್ದು ಉತ್ತರ ಭಾಗದಲ್ಲಿ ಒಳಗೆ ಪ್ರವೇಶವಿದ್ದು ಪಶ್ಚಿಮ ಭಾಗದ ಕಿಂಡಿಯಿಂದ (ಕನಕನ ಕಿಂಡಿ) ಶ್ರೀಕೃಷ್ಣನ ದರ್ಶನವನ್ನು ಮಾಡುವ ವ್ಯವಸ್ಥೆಯಿಂದ ಕೂಡಿದೆ. ಈ ಮೂರ್ತಿಯನ್ನು ಮಧ್ವಾಚಾರ್ಯರು 13ನೆಯ ಶತಮಾನದ ಅಂತ್ಯ ಭಾಗದಲ್ಲಿ ಪ್ರತಿಷ್ಠಾಪಿಸಿದರು. ಕೃಷ್ಣನ ಮೂರ್ತಿ ಉಡುಪಿಗೆ ಹಡಗಿನ ಮೂಲಕ ಬಂದ ವಿಚಾರದಲ್ಲಿ ಸಾಂಪ್ರದಾಯಿಕವಾದ ಒಂದು ಹೇಳಿಕೆ ಇದ್ದರೂ ಇದನ್ನು ಮಧ್ವಾಚಾರ್ಯರು ತಮ್ಮ ಔತ್ತರೇಯ ಪರ್ಯಟನ ಸಮಯದಲ್ಲಿ ತಂದು ಉಡುಪಿಯಲ್ಲಿ ಸ್ಥಾಪಿಸಿದರೆನ್ನಬಹುದು. *ಬಲ ಕೈಯಲ್ಲಿ ದಂಡ ಹಿಡಿದಿರುವ 15" ಎತ್ತರದ ಈ ಮೂರ್ತಿ ಬಹು ಪ್ರಾಚೀನವೂ ಮಹತ್ವವುಳ್ಳದ್ದೂ ಆಗಿದೆ. ಶ್ರೀ ಕೃಷ್ಣಮಠದಲ್ಲೇ ಶಂಕರಾಚಾರ್ಯರ ಶಿಷ್ಯರಾದ ಹಸ್ತಾಮಲಕಾ ಚಾರ್ಯರಿಂದ ಪ್ರತಿಷ್ಠಿತವಾದದ್ದೆನ್ನಲಾದ ತೈಲಕೃಷ್ಣ ಎಂಬ ವ್ಯಾವಹಾರಿಕ ಹೆಸರನ್ನು ಪಡೆದಿರುವ ಇನ್ನೊಂದು ಸುಂದರ ಮೂರ್ತಿ ಇದೆ. ಇದು ಸು.9ನೆಯ ಶತಮಾನದ ವೇಣುಗೋಪಾಲ ಕೃಷ್ಣಮೂರ್ತಿ, ಶ್ರೀ ಕೃಷ್ಣಮಠದ ಒಂದು ಭಾಗದಲ್ಲಿ ಮಧ್ವಪುಷ್ಕರಿಣಿ ಇದೆ. ಉಡುಪಿಯಲ್ಲಿ ಸೋದೆ, ಶಿರೂರು, ಕಾಣಿಯೂರು, ಕೃಷ್ಣಾಪುರ, ಆದಮಾರು, ಪಲಿಮಾರು, ಪೇಜಾವರ, ಪುತ್ತಿಗೆ ಎಂಬ ಅಷ್ಟ ಮಠಗಳಿವೆ. ಈ ಮಠಗಳ ಯತಿಗಳು ಶ್ರೀಕೃಷ್ಣನ ಪೂಜೆಯನ್ನು ಪರ್ಯಾಯ ಕ್ರಮದಲ್ಲಿ ಎರಡೆರಡು ವರ್ಷಗಳ ಕಾಲ ಮಾಡುತ್ತಾರೆ. ಅಷ್ಟಯತಿಗಳ ಪರಂಪರೆ ಯನ್ನು ಸ್ಥಾಪಿಸಿದುದು ಮಧ್ವಾಚಾರ್ಯರಾದರೂ ಪರ್ಯಾಯ ಕ್ರಮವನ್ನು ಅನುಷ್ಠಾನಕ್ಕೆ ತಂದುದು ಸೋದೆ ಮಠದ ಯತಿವರ್ಯರಾದ ಶ್ರೀ ವಾದಿರಾಜರು. ಅನುಕ್ರಮವಾಗಿ ಒಂದು ಮಠದ ಸ್ವಾಮಿಗಳಿಂದ ಇನ್ನೊಂದು ಮಠದ ಸ್ವಾಮಿಗಳು ಶ್ರೀ ಕೃಷ್ಣಮಠದ ಪೂಜಾಧಿಕಾರ ವಹಿಸಿಕೊಳ್ಳುವ ಸಮಾರಂಭವೇ ಪರ್ಯಾಯ ಮಹೋತ್ಸವ. ಇದು ಉಡುಪಿಯ ಅತ್ಯಂತ ದೊಡ್ಡ ಉತ್ಸವ, ಈ ಸಂದರ್ಭದಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿ ಉಡುಪಿಗೆ ಬರುತ್ತಾರೆ. ಉಡುಪಿಯಲ್ಲಿ ನಡೆಯುವ ಲಕ್ಷದೀಪೋತ್ಸವ, ಮಕರ ಸಂಕ್ರಮಣೋತ್ಸವ, ಶ್ರೀಕೃಷ್ಣ ಜಯಂತಿ ಇತರ ಪ್ರಮುಖ ಉತ್ಸವಗಳು. ಕೆಲವು ಪ್ರಮುಖ ತಾಣಗಳು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮರವಂತೆಯ ತೀರ ಸಾಲಿಗ್ರಾಮ ನರಸಿಂಹ ಮತ್ತು ಹನುಮಾನ್ ದೇವಸ್ಥಾನ ಕೋಟ ಅಮೃತೇಶ್ವರಿ ದೇವಸ್ಥಾನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಕೋಟ ಶನೇಶ್ವರ ದೇವಸ್ಥಾನ ಕುಂಭಾಸಿ ಅಮ್ಮನವರ ದೇವಸ್ಥಾನ ಕೋಟಿ ಲಿಂಗೇಶ್ವರ ಕೋಟೇಶ್ವರ ದೇವಸ್ಥಾನ ಮೋಗವೀರ ಕುಲಮಹಸ್ರೀ ದೇವಸ್ಥಾನ ಮಲ್ಪೆ ಕಾಪು ದ್ವೀಪಸ್ತಂಭ ಕಾರ್ಕಳದ ಗೊಮ್ಮಟೇಶ್ವರ, ಚತುರ್ಮುಖ ಬಸದಿ, ಅನಂತಶಯನ ದೇವಸ್ಥಾನ. ವೇಣೂರಿನ ಗೊಮ್ಮಟೇಶ್ವರ ಅತ್ತೂರಿನ ಸಂತ ಲಾರೆನ್ಸರ ಚರ್ಚ್ ಸೈಂಟ್ ಮೇರೀಸ್ ದ್ವೀಪ ಮೂಡಬಿದಿರೆಯ ಸಾವಿರ ಕಂಬದ ಬಸದಿ ಮಣಿಪಾಲ ಹೂಡೆ ಸಮುದ್ರ ಹೆಬ್ರಿ ಬೇಳಂಜೆ ಕತ್ತಲೆ ಬಸದಿ ಬಾರ್ಕೂರು ಸೂರಾಲು ಅರಮನೆ ಬೈಂದೂರು ಕೋಸಳ್ಳಿ ಜಲಪಾತ ನಂದಳಿಕೆಯಲ್ಲಿನ ಕವಿ ಮುದ್ದಣನ ಮನೆ ಎಲ್ಲೂರು ಇವನ್ನೂ ನೋಡಿ ಪಾಜಕ ಕೃಷ್ಣ ಮಠ ಶ್ರೀ ಮಧ್ವಾಚಾರ್ಯರು ಕನಕದಾಸರು ಪುರಂದರದಾಸರು ಉಡುಪಿ (ಲೋಕ ಸಭೆ ಚುನಾವಣಾ ಕ್ಷೇತ್ರ) ಹೊರಗಿನ ಸಂಪರ್ಕಗಳು ಸರಕಾರಿ ಪುಟ ಉಡುಪಿಯ ಬಗ್ಗೆ ಹೆಚ್ಚಿನ ಮಾಹಿತಿ ಶ್ರೀ ಉಡುಪಿ ಕೃಷ್ಣ ಟೆಂಪಲ್ ಭೂಗೋಳ ಐತಿಹಾಸಿಕ ಸ್ಥಳಗಳು ಭಾರತದ ಪಟ್ಟಣಗಳು ಉಡುಪಿ ಜಿಲ್ಲೆ ಕರ್ನಾಟಕದ ಪ್ರಮುಖ ಸ್ಥಳಗಳು ಭಾರತದ ಪವಿತ್ರ ಕ್ಷೇತ್ರಗಳು ಹಿಂದೂ ಧರ್ಮದ ಪುಣ್ಯ ಕ್ಷೇತ್ರಗಳು ಉಡುಪಿ ತಾಲೂಕಿನ ಪ್ರವಾಸಿ ತಾಣಗಳು
1055
https://kn.wikipedia.org/wiki/%E0%B2%A4%E0%B3%81%E0%B2%AE%E0%B2%95%E0%B3%82%E0%B2%B0%E0%B3%81
ತುಮಕೂರು
ತುಮಕೂರು - ದಕ್ಷಿಣ ಕರ್ನಾಟಕದಲ್ಲಿ ಪ್ರಮುಖ ಜಿಲ್ಲಾಕೇಂದ್ರವಾಗಿದೆ. ತುಮಕೂರಿನ ಮೂಲ ಹೆಸರು ತುಮ್ಮೆಗೂರು. ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಬೆಂಗಳೂರಿನಿಂದ ೭೦ ಕಿ.ಮಿ. ದೂರದಲ್ಲಿದೆ.ಈ ತುಮಕೂರು ಜಿಲ್ಲೆ ರಚನೆಯಾದ ವರ್ಷ 1-11-1956 ಇದರ ವಿಸ್ತೀರ್ಣ-10,597 ಚ.ಕೀ.ಮೀ ತುಮಕೂರು ಜಿಲ್ಲೆ 1832 ರಲ್ಲಿ ಅಸ್ತಿತ್ವಕ್ಕೆ ಬಂದಿತು ದಕ್ಷಿಣ ಕರ್ನಾಟಕ ರಾಜ್ಯದಲ್ಲಿರುವ ಪ್ರಮುಖ ನಗರವಾಗಿದೆ ತುಮಕೂರು ಜಿಲ್ಲೆ ಅತೀ ಹೆಚ್ಚು ಕೆಂಪು ಮಣ್ಣುನ್ನು ಹೊಂದಿದೆ.ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಅತೀ ಹೆಚ್ಚು ತೆಂಗು, ರಾಗಿ ಬೆಳೆ ಬೆಳೆಯುವ ಜಿಲ್ಲೆಯಾಗಿದೆ. ಈ ಜಿಲ್ಲೆಯು ಕಲ್ಪತರು ನಾಡು ಎಂದು ಹೆಸರುವಾಸಿಯಾಗಿದೆ.ತುಮಕೂರು ಜಿಲ್ಲೆಯಲ್ಲಿ ಕಗ್ಗಲಡು ಪಕ್ಷಿಧಾಮವಿದೆ. ತುಮಕೂರು-ಬೆಂಗಳೂರಿನ ಹೆದ್ದಾರಿಯಲ್ಲಿರುವ ಕ್ಯಾತಸಂದ್ರದ ಬಳಿ ಇರುವ ಪುಣ್ಯಕ್ಷೇತ್ರವಾದ ಶ್ರೀ ಸಿದ್ದಗಂಗಾ ಮಠ ವಿಶ್ವವಿಖ್ಯಾತವಾಗಿದೆ. ಇಲ್ಲಿ ಜಾತಿ, ಮತ, ಲಿಂಗ ತಾರತಮ್ಯವಿಲ್ಲದೆ ನಿರಂತರವಾಗಿ ನೆಡೆಯುತ್ತಿರುವ ಜ್ಞಾನ ದಾಸೋಹ ಮತ್ತು ಅನ್ನ ದಾಸೋಹ ವಿಶ್ವಕ್ಕೆ ಮಾದರಿಯಾಗಿದೆ. ಮಠದ ವತಿಯಿಂದ ಪ್ರತಿ ದಿನ ಸಾವಿರಾರು ಜನ ಬಡ ವಿದ್ಯಾರ್ಥಿಗಳಿಗೆ ವಸತಿ, ಊಟ ಮತ್ತು ವಿದ್ಯಾದಾನ ನೆಡೆಯುತ್ತಿದೆ. ಅಧುನಿಕ ತುಮಕೂರನ್ನು ಪವಾಡದಂತೆ ಪ್ರಸಿದ್ಧಿಗೆ ತಂದ ಸಿದ್ಧಗಂಗಾ ಮಠಾಧೀಶರಾದ, ತ್ರಿವಿಧ ದಾಸೋಹಿ ೧೦೯ ವರ್ಷದ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು, ನೆಡೆದಾಡುವ ದೇವರೆಂದೇ ಪ್ರಖ್ಯಾತರಾಗಿದ್ದಾರೆ. ಸಿದ್ಧಗಂಗಾ ಮಠದ ಸಮೀಪ ಇರುವ ಕ್ಯಾತ್ಸಂದ್ರ, ತಟ್ಟೆಇಡ್ಲಿ ತಿನಿಸಿಗೆ ಖ್ಯಾತಿ ಪಡೆದಿದೆ. ಬೆಂಗಳೂರು - ಮಧುಗಿರಿ ಹೆದ್ದಾರಿಯಲ್ಲಿರುವ ಸಿದ್ದರ ಬೆಟ್ಟವು ಗಿಡಮೂಲಿಕೆಗಳಿಗೆ ಮತ್ತು ಅಲ್ಲಿ ಸಾಧನೆ ಮಾಡುತ್ತಿರುವ ಸಿದ್ಧರು ಮತ್ತು ಸಂತರಿಗಾಗಿ ಪ್ರಸಿದ್ಧವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿರುವ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರ ಮತ್ತು ಕಗ್ಗೆರೆ ನಾಡಿನ ಪ್ರಮುಖ ವೀರಶೈವ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿವೆ. ತುಮಕೂರು ಜಿಲ್ಲೆಯಲ್ಲಿರುವ ತಿಪಟೂರು ತೆಂಗಿನ ಕೃಷಿಗೆ ಹೆಸರಾಗಿದ್ದು ಕಲ್ಪತರು ನಾಡು ಎಂದು ಖ್ಯಾತಿ ಪಡೆದಿದೆ. ತುಮಕುರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನಲ್ಲಿರುವ ಗೊರವನಹಳ್ಳಿ ಶ್ರೀ ಲಕ್ಷ್ಮಿ ದೇವಸ್ಥಾನವು ರಾಜ್ಯಾದ್ಯಂತ ಪ್ರಸಿದ್ಧಿ ಪಡೆದಿರುವ ಪುಣ್ಯಕ್ಷೇತ್ರ. ಮಧುಗಿರಿ ಬೆಟ್ಟ ಏಷಿಯಾ ಖಂಡದ ಎರಡನೇ ಅತೀ ದೊಡ್ಡ ಏಕಶಿಲಾ ಬೆಟ್ಟ ಮತ್ತು ಈ ಬೆಟ್ಟದ ಮೇಲೆ ಬಹಳ ದೊಡ್ಡದಾದ ಕೋಟೆ ಇದೆ. ಮಧುಗಿರಿಯ ದಂಡಿನ ಮಾರಮ್ಮದೇವಿ ದೇವಸ್ಥಾನ ಪ್ರಖ್ಯಾತಿ ಹೊಂದಿದೆ. ದೇವರಾಯನ ದುರ್ಗ ನರಸಿಂಹ ಸ್ವಾಮಿ ದೇವಸ್ಥಾನವಿರುವ ಪುಣ್ಯಕ್ಷೇತ್ರವಾಗಿದೆ. ಶ್ರೀ ಕ್ಷೇತ್ರ ಕೋಡ್ಲಹಳ್ಳಿ ಜಗನ್ಮಾತೆ ಉದ್ಬವ ಮಾರಮ್ಮ ನವರೂ ಸಾಕ್ಷಾತ್ ಪಾರ್ವತಮ್ಮನವರ ಸ್ವರೂಪ, ಮಹಾಲಕ್ಷ್ಮಿ ಮಹಾಸರಸ್ವತಿ ಮಹಾಕಾಳಿ ಯಾಗಿ ನೆಲೆನಿಂತಿರುವ ಐತಿಹಾಸಿಕ ಪುರಾಣ ಪ್ರಸಿದ್ಧವಾದ ಪುಣ್ಯಕ್ಷೇತ್ರ ಸ್ಥಳ ಕೋಡ್ಲಹಳ್ಳಿ, ಕ್ಯಾಮೆನಹಳ್ಳಿ ಗ್ರಾಮ ಪಂಚಾಯತಿ, ಹೋಳವನಹಳ್ಳಿ ಹೋಬಳಿ, ಕೊರಟಗೆರೆ ತಾಲ್ಲೂಕು, ತುಮಕೂರು ಜಿಲ್ಲೆ , ಕರ್ನಾಟಕ ತುಮಕೂರು ಹಲವು ಕೈಗಾರಿಕೆಗಳಿಗೆ ಮನೆಯಾಗಿದೆ. ತುಮಕೂರಿನ ಪ್ರಮುಖ ಕೈಗಾರೆಕೆಗಳು ಹೆಚ್.ಎಂ.ಟಿ, ಗ್ರಾನೈಟ್ ಪರಿಷ್ಕರಣೆ, ಟಿ.ವಿ.ಎಸ್.ಇ, ಅಕ್ಕಿ ಮಿಲ್, ಎಣ್ಣೆ ಮಿಲ್ ಇತ್ಯಾದಿ. ಶಿಕ್ಷಣ ಕ್ಷೇತ್ರದಲ್ಲಿ ಕೂಡಾ ತುಮಕೂರು ಹೆಸರುವಾಸಿಯಾಗಿದೆ. ಸಿದ್ಧಗಂಗಾ ಮಠದ ಶಿಕ್ಷಣ ಸಂಸ್ಥೆಗಳು, ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳು ಪ್ರಮುಖವಾಗಿವೆ. ತುಮಕೂರು ವಿಶ್ವವಿದ್ಯಾಲಯ ಕಾರ್ಯಾರಂಭಿಸಿದೆ. ಪ್ರಖ್ಯಾತ ನಾಟಕ ಕಂಪನಿಯು, ಚಿತ್ರ ನಿರ್ಮಾಣ ಸಂಸ್ಥೆಯೂ ಆಗಿದ್ದ ಗುಬ್ಬಿ ನಾಟಕ ಕಂಪನಿಯ ಸಂಸ್ಥಾಪಕರಾದ ವೀರಣ್ಣನವರು ತುಮಕೂರು ಜಿಲ್ಲೆಯ ಗುಬ್ಬಿಯವರು. ಮಾವತ್ತೂರು ಕೆರೆ ಜಿಲ್ಲೆಯ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಮಾವತ್ತೂರು ಗ್ರಾಮದಲ್ಲಿ ಜಯಚಾಮರಾಜ ಒಡೆಯರ್ ಕಾಲದಲ್ಲಿ ಕಟ್ಟಿದ ಬೃಹತ್ ಕೆರೆ. ಇದು ಜಿಲ್ಲೆಯ ಮೊದಲ ಮತ್ತು ಇಂದಿಗೂ ಸುಭದ್ರವಾದ ದೊಡ್ಡದಾದ ಕೆರೆ. ತುಮಕೂರು ಜಿಲ್ಲೆಯ ತಾಲ್ಲೂಕುಗಳು ತುಮಕೂರು ಗುಬ್ಬಿ ಕೊರಟಗೆರೆ ಮಧುಗಿರಿ ಪಾವಗಡ ಶಿರಾ ಚಿಕ್ಕನಾಯಕನಹಳ್ಳಿ ತಿಪಟೂರು ಕುಣಿಗಲ್ ತುರುವೇಕೆರೆ ತುಮಕೂರು ಜಿಲ್ಲೆಯ ಪ್ರಮುಖ ಶಿಕ್ಷಣ ಸಂಸ್ಥೆಗಳು ತುಮಕೂರು ವಿಶ್ವವಿದ್ಯಾಲಯ ಶ್ರೀದೇವಿ ಶಿಕ್ಷಣ ಸಂಸ್ಠೆ ಸಿದ್ಧಗಂಗಾ ಶಿಕ್ಷಣ ಸಂಸ್ಠೆ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಠೆ ಹೆಚ್.ಎಮ್.ಎಸ್ ಶಿಕ್ಷಣ ಸಂಸ್ಠೆ ಸಿ.ಐ.ಟಿ (ಚನ್ನಬಸವೇಶ್ವರ) ಶಿಕ್ಷಣ ಸಂಸ್ಠೆ ತುಮಕೂರು ಜಿಲ್ಲೆಯ ಪ್ರಸಿದ್ಧ ಸ್ಥಳಗಳು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ದೇವಾಲಯ ಸಾಸಲು ಸಿದ್ದಗಂಗ ಮಠ ಬೆಟ್ಟಹಳ್ಳಿ ಮಠ: ಶ್ರೀ ಉರಿಗದ್ದೀಗೇಶ್ವರ ದೇವಾಲಯ, ಗಣಪತಿ ದೇವಾಲಯ, ವಿದ್ಯಾಸಂಸ್ಥೆಗಳು, ಉಚಿತ ವಸತಿ ನಿಲಯಗಳು ಶ್ರೀ ಕ್ಷೇತ್ರ ಕೋಡ್ಲಹಳ್ಳಿ ಜಗನ್ಮಾತೆ ಉದ್ಬವ ಮಾರಮ್ಮನವರೂ, ಸಾಕ್ಷಾತ್ ಪಾರ್ವತಮ್ಮ ನವರ ಸ್ವರೂಪ, ಮಹಾಲಕ್ಷ್ಮಿ ಮಹಾಸರಸ್ವತಿ ಮಹಾಕಾಳಿ ಯಾಗಿ ನೆಲೆನಿಂತಿರುವ ಐತಿಹಾಸಿಕ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಅಂಕನಹಳ್ಳಿ ಮಠ :ವಿದ್ಯಾಸಂಸ್ಥೆಗಳು ಮತ್ತು ಮೊರಾರ್ಜಿ ದೇಸಾಯಿ ವಿದ್ಯಾಸಂಸ್ಥೆ. ಹುತ್ರಿದುರ್ಗ ಬೆಟ್ಟ: ಶ್ರೀಕೇಂಪೇಗೌಡರು ಕಟ್ಟಿಸಿರುವ ಕೋಟೆ ಕೊತ್ತಲುಗಳು, ಗಂಗಾಧರೇಶ್ವರ ದೇವಸ್ಥಾನ, ಪಾತಾಳಗಂಗೆ, ದೇವರಾಯನದುರ್ಗ - ಯೋಗ ನರಸಿಂಹ ಮತ್ತು ಭೋಗ ನರಸಿಂಹ ದೇವಸ್ಥಾನ ನಾಮದ ಚಿಲುಮೆ ವಿದ್ಯಾ ಶಂಕರ ದೇವಸ್ಥಾನ ಗೂಳೂರು ಗಣಪತಿ ದೇವಸ್ಥಾನ ಕೈದಾಳ ಚನ್ನಕೇಶವ ದೇವಸ್ಥಾನ ಮಂದರ ಗಿರಿ ಜೈನ ದೇವಸ್ಥಾನ ನಿಜಗಲ್ಲು ಬೆಟ್ಟ ಮತ್ತು ಕೋಟೆ ಗೊರವನಹಳ್ಳಿ ಲಕ್ಷ್ಮಿದೇವಸ್ಥಾನ ಮಧುಗಿರಿ ಬೆಟ್ಟ ಮತ್ತು ಕೋಟೆ ಚನ್ನರಾಯನ ದುರ್ಗ ಸಿದ್ದರ ಬೆಟ್ಟ ಕ್ಯಾಮೇನಹಳ್ಳಿ ಜಾತ್ರೆ ಬೋರನ ಕಣಿವೆ ಮೈದಾಡಿ ಮಾರ್ಕೋನಹಳ್ಳಿ ಆಣೆಕಟ್ಟು ಕುಣಿಗಲ್ - ಸೋಮೇಶ್ವರ ದೇವಸ್ಥಾನ ಹೆಬ್ಬೂರು ಕಾಮಾಕ್ಷಿ ಮಠ, ಚಿಕ್ಕಣ್ಣ ಸ್ವಾಮಿ ಮಣಿಕುಪ್ಪೆ - ಶ್ರೀ ನಾರಸಿ೦ಹಾ೦ಜನೇಯ ಸ್ವಾಮಿ ದೇವಸ್ಥಾನ ಹ೦ದನಕೆರೆ:೧೨ಸೋಪಾನದ ಬಾವಿ,ರೇವಣ್ಣಸಿದ್ಡೇಶ್ವರ ಮಠ,ಶ್ರೀಗ೦ಗಾದರೇಶ್ವರ ದೇವಸ್ಥಾನ ಕಳುವರಹಳ್ಳಿ ಶಿರಾ ತಾಲ್ಲೂಕಿನ ಒಂದು ಇತಿಹಾಸ ಪ್ರಸಿದ್ಧ ಗ್ರಾಮ ಐದು ಜಾನಪದ ವೀರ ಜುಂಜಪ್ಪನ ಮೂಲ ನೆಲೆಯಾಗಿದ್ದು ಇಲ್ಲಿ ಜುಂಜಪ್ಪ ಜೀವಿಸಿದ್ದಾನೆಂದು ಇಲ್ಲಿನ ಅವಶೇಷಗಳು ಹೇಳುತ್ತವೆ ರೈತರಪಾಳ್ಯ ವೆ೦ಬ ನೊಡ ಬೆಕಾದ ಒಂದು ಮನರ೦ಜನೆಯ ಪುಟ್ಟ ಸು೦ದರ ಕುಗ್ರಾಮ. ಬೆಳ್ಳಾವಿ ಸೊಮೆಶ್ವರ ದೇವಸ್ಥಾನ --ಬೆಳ್ಳಾವಿ ಅಂಕನಹಳ್ಳಿ ಮಠ ಹುತ್ರಿದುರ್ಗ ಬೆಟ್ಟ ಮಧುಗಿರಿಯ ತಾಲ್ಲೂಕಿನ ಕೋಟೆಕಲ್ಲಪ್ಪ(ಕೋಟೆಕಲ್ಲರಂಗನಾಥ ಸ್ವಾಮಿ). ಬೆಟ್ಪ ಹಾಗಲವಾಡಿ ಕೊರಟಗೆರೆ ತಾಲ್ಲೂಕಿನ ಪ್ರಸಿದ್ಧವಾದ ವಡ್ಡಗೆರೆ ವೀರನಾಗಮ್ಮ ದೇವಿ (ಅಮ್ಮಾಜಿ ಕ್ಷೇತ್ರ). ಸಿರಾ ತಾಲ್ಲೂಕಿನ ಪ್ರಸಿದ್ಧ ಕಗ್ಗಲಡು ಪಕ್ಷಿಧಾಮ. ಸಿರಾ ತಾಲ್ಲೂಕಿನ ಪ್ರಸಿದ್ಧವಾದ ಹುಳಿಗೆರೆ ಶ್ರೀ ಕೊಡಿವೀರಪ್ಪ ಸ್ವಾಮಿ ಜಾತ್ರೆ... ಹುತ್ರಿದುರ್ಗ ಇಲ್ಲಿ ನಾಡಪ್ರಭುಕೇಂಪೇಗೌಡರು ಕಟ್ಟಿಸಿರುವ ಬೃಹತ್ ಕೋಟೆ ಮತ್ತು ಶ್ರೀ ಗಂಗಾಧರೇಶ್ವರ ದೇವಸ್ಥಾನ. ಪಾತಾಳ ಗಂಗೆ, ಸಂಕೋಲೆ ಬಸವಣ್ಣನ ದೇವರು, ಪ್ರಸಿದ್ಧ ಕಾಡಪ್ಪನವರ ಮಠ ಮುಂತಾದ ಪ್ರಸಿದ್ಧ ಸ್ಥಳಗಳನ್ನು ಈ ಬೃಹತ್ ಬೆಟ್ಟದಲ್ಲಿ ಕಾಣಬಹುದು. ಪ್ರವಾಸಿಗರಿಗೆ ನೆಚ್ಚಿನ ತಾಣವಾಗಿದ್ದು, ಇದು ಬೆಂಗಳೂರಿನಿಂದ ಸುಮಾರು ೮೦ ಕಿ.ಮಿ. ದೂರವಿದ್ದು, ಈ ಬೆಟ್ಟಕ್ಕೆ ಬರಲು ಬೆಂಗಳೂರಿನಿಂದ ಹಲವು ಖಾಸಗಿ ಮತ್ತು ಸರ್ಕಾರಿ ಬಸ್ ಗಳಿವೆ.ಬೆಂಗಳೂರಿನಿಂದ ಮಾಗಡಿ ಮುಖಾಂತರ ಬಂದು ಕಲ್ಯ, ಹೊಸಪಾಳ್ಯ ಕ್ಕೆ ಸೇರುವ ಮುನ್ನ ಎಡಕ್ಕೆ ತಿರುವುಪಡೆದರೆ, ಕತ್ತರಿಘಟ್ಟ, ಹಾಲುವಾಗಿಲು ನಂತರ ಸಂತೇಪೇಟೆಯಲ್ಲಿ ಇಳಿದು ನಂತರ ಬೆಟ್ಟಕ್ಕೆ ಹೋಗಬಹುದು.ಮೇಲಿನಂತೆಯೆ ಮಾಗಡಿಯಿಂದ ಹುಲಿಯೂರುದುರ್ಗ ಮಾರ್ಗವಾಗಿ ಬಂದು ಅಗಲಕೋಟೆ ಹ್ಯಾಂಡ್ ಪೋಸ್ಟ್ ನಲ್ಲಿ ಬಲ್ಲಕ್ಕೆ ತಿರುವು ಪಡೆದು ಯಲಗಲವಾಡಿ ಸೇರುವ ಮುನ್ನ ಬಲ ತಿರುವು ಪಡೆದು ಹೊಢಾಘಟ್ಟ ಮಾರ್ಗವಾಗಿ ಬಂದು ನಂತರ ಚಿಕ್ಕ ಬೆಟ್ಟದರಸ್ತೆಯಲ್ಲಿ ಸಾಗಿದ ನಂತರ ಆದಿ ಹನುಮಂತರಾಯ ಸ್ವಾಮಿ ದೇವಸ್ಥಾನದ ನಂತರ ಬಲ ತಿರುವು ಪಡೆದರೆ ಹುತ್ರಿದುರ್ಗ ಬೆಟ್ಟಕ್ಕೆ ಹೋಗಬಹುದು. ಮತ್ತೀಕೆರೆ ಗುಬ್ಬಿ , ತುರುವೇಕೆರೆ ಮತ್ತು ಕುಣಿಗಲ್ ತಾಲ್ಲೂಕುಗಳ ಗಡಿ ಬಾಗದಲ್ಲಿರುವ ಒಂದು ಸುಂದರ ಗ್ರಾಮ ಸಲ್ಲಾಪುರದಮ್ಮ ಮತ್ತು ಕೊಲ್ಲಾಪುರದಮ್ಮ ಎಂಬ ದೇವಸ್ಥಾನವು ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಗಿಡದ ಕೆಂಚನಹಳ್ಳಿಯಲ್ಲಿ ನೆಲೆಸಿದ್ದು ಪ್ರತಿ ವರ್ಷ ಜಾತ್ರೆಯು ನಡೆಯುತ್ತದೆ.ಅಲ್ಲದೇ ಹೆಸರಾಂತ ಅಂಜನೇಯ ಸ್ವಾಮಿಯು ಇದೇ ತಾಲ್ಲೂಕಿನ ಅಂದರೆ ಕುಣಿಗಲ್ ನ ಹುಲಿಯೂರುದುರ್ಗ ಹೋಬಳಿಯ ಕಲ್ಲುದೇವನಹಳ್ಳಿಯಲ್ಲಿ ನೆಲೆಸಿದ್ದು, ಇಲ್ಲಿಯೂ ಸಹ ಪ್ರತಿ ವರ್ಷ ಜಾತ್ರೆಯು ನಡೆಯುತ್ತದೆ. ಬೆಟ್ಟಹಳ್ಳಿಮಠ ಇದು ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಮಟ್ಟದಲ್ಲಿ ಬರುವ ಒಂದು ಪ್ರಮುಖ ವಿಧ್ಯಾಸಂಸ್ಥೆಯಾಗಿದ್ದು, ಇಲ್ಲಿ ಶ್ರೀ ಉರಿಗದ್ದಿಗೇಶ್ವರ ದೇವಸ್ಥಾನವಿದೆ. ರಾಮನಗರದಿಂದ - ಕುಣಿಗಲ್ ರಾಜ್ಯ ಹೆದ್ದಾರಿಯಲ್ಲಿರುವ ಬೆಟ್ಟಹಳ್ಳಿ ಬಳಿ ಇರುವ ವೀರಶೈವ ಪುಣ್ಯಕ್ಷೇತ್ರವಾದ ಶ್ರೀ ಬೆಟ್ಟಹಳ್ಳಿಮಠ ವಿಶ್ವವಿಖ್ಯಾತವಾಗಿದೆ. ಇಲ್ಲಿ ಜಾತಿ, ಮತ, ಲಿಂಗ ತಾರತಮ್ಯವಿಲ್ಲದೆ ನಿರಂತರವಾಗಿ ನೆಡೆಯುತ್ತಿರುವ ಜ್ಞಾನ ದಾಸೋಹ ಮತ್ತು ಅನ್ನ ದಾಸೋಹ ವಿಶ್ವಕ್ಕೆ ಮಾದರಿಯಾಗಿದೆ. ಮಠದ ವತಿಯಿಂದ ಪ್ರತಿ ದಿನ ಸಾವಿರಾರು ಜನ ಬಡ ವಿದ್ಯಾರ್ಥಿಗಳಿಗೆ ವಸತಿ, ಊಟ ಮತ್ತು ವಿದ್ಯಾದಾನ ನೆಡೆಯುತ್ತಿದೆ. ಅಧುನಿಕ ಬೆಟ್ಟಹಳ್ಳಿಮಠವನ್ನು ಪವಾಡದಂತೆ ಪ್ರಸಿದ್ಧಿಗೆ ತಂದ ಬೆಟ್ಟಹಳ್ಳಿಮಠ ಮಠಾಧೀಶರಾದ, ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀನೀಲಕಂಠಶಿವಾಚಾರ್ಯ ಮಹಾ ಸ್ವಾಮಿಗಳು, ನೆಡೆದಾಡುವ ಶಿವನೆಂದೇ ಪ್ರಖ್ಯಾತರಾಗಿದ್ದಾರೆ. ಅಲ್ಲದೇ ಮಠದ ವತಿಯಿಂದ ಇಲ್ಲಿ ನರ್ಸರಿ ಯಿಂದ ಪದವಿ ಪೂರ್ವ ಕಾಲೇಜು ಮತ್ತು ಸಂಸ್ಕ್ರುತ ಶಿಕ್ಷಣವನ್ನು ನೀಡಲಾಗುವುದು. ಮತ್ತು ಈ ಸಂಸ್ಥೆಯಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ. ಇಲ್ಲಿ ಪ್ರತಿ ವರ್ಷ ಶಿವರಾತ್ರಿ ಹಬ್ಬದಂದು ಜಾತ್ರೆಯು ಬಹಳ ವಿಜೃಂಭಣೆಯಿಂದ ನಡೆಯುವುದರ ಜೊತೆಗೆ ಕಳೆದ ಐದಾರು ವರ್ಷಗಳಿಂದ ಬಾರಿ ದನಗಳ ಜಾತ್ರೆಯನ್ನು ಏರ್ಪಡಿಸುವುದರ ಜೊತೆಗೆ ಉತ್ತಮವಾದ ರಾಸುಗಳಿಗೆ ಬಹುಮಾನವನ್ನು ಸಹ ನೀಡುವ ವ್ಯ್ವವಸ್ಥೆಯನ್ನು ಮಾಡಲಾಗಿದೆ. ಇದನ್ನೂ ನೋಡಿ ತುಮಕೂರು (ಲೋಕ ಸಭೆ ಚುನಾವಣಾ ಕ್ಷೇತ್ರ) ಹೊರಗಿನ ಸಂಪರ್ಕಗಳು ಸಿದ್ದಗಂಗಾ ತಂತ್ರಜ್ಞಾನ ಕಾಲೇಜು ಭೂಗೋಳ ಕರ್ನಾಟಕದ ಪ್ರಮುಖ ಸ್ಥಳಗಳು ತುಮಕೂರು ಜಿಲ್ಲೆಯ ತಾಲೂಕುಗಳು
1067
https://kn.wikipedia.org/wiki/%E0%B2%AC%E0%B3%86%E0%B2%B3%E0%B2%97%E0%B2%BE%E0%B2%B5%E0%B2%BF
ಬೆಳಗಾವಿ
ಬೆಳಗಾವಿಯು ಕರ್ನಾಟಕದ ವಾಯುವ್ಯ ಭಾಗದಲ್ಲಿ ಇರುವ ನಗರ ಮತ್ತು ಜಿಲ್ಲೆ. ಕರ್ನಾಟಕದ ಅತೀ ದೊಡ್ಡ ಜಿಲ್ಲೆ ಹಾಗು ಪ್ರಮುಖ ನಗರಗಳಲ್ಲೊಂದು. ಇಂಡಾಲ್ (ಭಾರತೀಯ ಅಲ್ಯೂಮಿನಿಯಮ್ ಕಂಪನಿ) ಬೆಳಗಾವಿಯಲ್ಲಿದೆ. ಇದಲ್ಲದೆ ಭಾರತೀಯ ಸೇನಾ ಪಡೆಗಳಿಗೆ ಸಂಬಂಧಪಟ್ಟ ಕೆಲವು ತರಬೇತಿ ಶಿಬಿರಗಳು ಮತ್ತು ಭಾರತೀಯ ವಾಯುಸೇನೆಯ ಒಂದು ವಿಮಾನ ನಿಲ್ದಾಣ ಬೆಳಗಾವಿಯಲ್ಲಿವೆ. ಚರಿತ್ರೆ ಬೆಳಗಾವಿಯ ಪುರಾತನ ಹೆಸರು ವೇಣುಗ್ರಾಮ. ಆದರೆ ಈಗಿರುವ ಹೆಸರು ಬಂದದ್ದು "ಬೆಳ್ಳಗೆ+ಆವಿ" ಎಂದರೆ ಇಲ್ಲಿನ ವಾತಾವರಣದಲ್ಲಿ ಬೆಳಗಿನ ಜಾವ ಮಂಜು ಬೀಳುತ್ತಿರುತ್ತದೆ. ಅದರಿಂದ "ಬೆಳ್ಳಗಾವಿ" ಹೆಸರು ಬಂದಿದೆ. ಈ ಜಿಲ್ಲೆಯ ಅತಿ ಪ್ರಾಚೀನ ಸ್ಥಳ ಎಂದರೆ ಹಲಸಿ - ಉಪಲಬ್ಧವಾಗಿರುವ ತಾಮ್ರಶಾಸನಗಳ ಆಧಾರದ ಮೇಲೆ ಹಲಸಿ ಕೆಲವು ಕದಂಬ ವಂಶದ ಅರಸರ ರಾಜಧಾನಿಯಾಗಿದ್ದಿತೆಂದು ಊಹಿಸಲಾಗಿದೆ. ೬ ನೇ ಶತಮಾನದಿಂದ ಸುಮಾರು ಕ್ರಿ.ಶ. ೭೬೦ ರ ವರೆಗೆ ಈ ಸ್ಥಳ ಚಾಲುಕ್ಯ ಸಾಮ್ರಾಜ್ಯದ ಭಾಗವಾಗಿದ್ದು, ನಂತರ ರಾಷ್ಟ್ರಕೂಟರ ನಿಯಂತ್ರಣಕ್ಕೆ ಸಾಗಿತು. ರಾಷ್ಟ್ರಕೂಟರ ಶಕ್ತಿ ಕಡಿಮೆಯಾದ ನಂತರ ರತ್ತ ವಂಶದ (೮೭೫ - ೧೨೫೦)ಕೈಯಲ್ಲಿದ್ದ ವೇಣುಗ್ರಾಮ, ೧೨೧೦ ರ ನಂತರ ರಾಜಧಾನಿಯಾಯಿತು. ೧೨೫೦ ರ ನಂತರ ದೇವಗಿರಿಯ ಯಾದವರು ಈ ಪ್ರದೇಶವನ್ನು ಸ್ವಲ್ಪ ಕಾಲ ಆಳಿದರು. ೧೩೨೦ ರಲ್ಲಿ ದೆಹಲಿಯ ಸುಲ್ತಾನೇಟ್ ಗಳ ಕೈಯಲ್ಲಿ ಯಾದವರು ಸೋಲನುಭವಿಸಿದ ನಂತರ ಸ್ವಲ್ಪ ಕಾಲ ದೆಹಲಿಯ ಆಡಳಿತದಲ್ಲಿ ಬೆಳಗಾವಿ ಜಿಲ್ಲೆ ಇತ್ತು. ಆದರೆ ಕೆಲವೇ ವರ್ಷಗಳ ನಂತರ ವಿಜಯನಗರ ಸಾಮ್ರಾಜ್ಯ ಈ ಪ್ರದೇಶವನ್ನು ತನ್ನದಾಗಿಸಿಕೊಂಡಿತು. ಬೆಳಗಾವಿ ಜಿಲ್ಲೆಯ ಉತ್ತರದ ಭಾಗಗಳು ೧೩೪೭ ರಲ್ಲಿ ಬಹಮನಿ ಸುಲ್ತಾನರ ಕೈ ಸೇರಿದವು. ೧೪೭೩ ರಲ್ಲಿ ಬೆಳಗಾವಿ ಪಟ್ಟಣ ಮತ್ತು ಜಿಲ್ಲೆಯ ಉಳಿದ ಭಾಗಗಳನ್ನು ಸಹ ಬಹಮನಿ ಸುಲ್ತಾನರು ಗೆದ್ದರು. ಬಿಜಾಪುರದ ಸುಲ್ತಾನರನ್ನು ಔರಂಗಜೇಬ್ ೧೬೮೬ ರಲ್ಲಿ ಸೋಲಿಸಿದ ಮೇಲೆ ಸ್ವಲ್ಪ ಕಾಲ ಬೆಳಗಾವಿ ಮುಘಲ್ ಸಾಮ್ರಾಜ್ಯದ ಭಾಗವಾಯಿತು. ೧೭೭೬ ರಲ್ಲಿ ಹೈದರ್ ಅಲಿ ಈ ಪ್ರದೇಶವನು ಗೆದ್ದರೂ ಬ್ರಿಟಿಷರ ಸಹಾಯದಿಂದ ಮರಾಠಾ ಪೇಶ್ವೆಗಳು ಈ ಪ್ರದೇಶವನ್ನು ಗೆದ್ದರು. ೧೮೧೮ ರಲ್ಲಿ ಬ್ರಿಟಿಷರ ಆಡಳಿತಕ್ಕೆ ಸಾಗಿದ ಬೆಳಗಾವಿ ಧಾರವಾಡ ಜಿಲ್ಲೆಯ ಭಾಗವಾಗಿತ್ತು. ೧೮೩೬ ರಲ್ಲಿ ಈ ಜಿಲ್ಲೆಯನ್ನು ಎರಡು ಭಾಗವಾಗಿ ಮಾಡಿ ಉತ್ತರ ಭಾಗವನ್ನು ಬೆಳಗಾವಿ ಜಿಲ್ಲೆಯಾಗಿ ಮಾಡಲಾಯಿತು.೧೯೪೭ ರಲ್ಲೆ ಭಾರತ ಸ್ವಾಂತಂತ್ರ್ಯಪಡೆದ ನಂತರ ಬೆಳಗಾವಿ ಮುಂಬಯಿ ರಾಜ್ಯದ ಭಾಗವಯಿತು ಆದರೆ ೧೯೫೬ ರಲ್ಲಿ ನಡೆದ ರಾಜ್ಯಗಳ ಮರುವಿಂಗಡನಾ ಕಾಯ್ದೆಯ ಪ್ರಕಾರ ಬೆಳಗಾವಿಯನ್ನ ಆಗಿನ ಮೈಸೂರು ರಾಜ್ಯಕ್ಕೆ ಸೆರಿಸಲಾಯಿತು ನಂತರ ೧೯೭೨ ರಲ್ಲಿ ಮೈಸೂರು ಕರ್ನಾಟಕ ರಾಜ್ಯವಾದ ನಂತರ ಬೆಳಗಾವಿ ಕರ್ನಾಟಕದ ಭಾಗವಾಗಿ ಮುಂದುವರಿಯಿತು. ಬೆಳಗಾವಿ ಜಿಲ್ಲೆಯಲ್ಲಿರುವ ಕಿತ್ತೂರು ಚಾರಿತ್ರಿಕವಾಗಿ ಪ್ರಸಿದ್ಧ. ಕಿತ್ತೂರು ರಾಣಿ ಚೆನ್ನಮ್ಮ ಚರಿತ್ರೆಯಲ್ಲಿ ಸಾಹಸ ಮತ್ತು ಧೈರ್ಯದ ಪ್ರತೀಕವಾಗಿದ್ದಾಳೆ. ಬ್ರಿಟಿಷ್ ಆಡಳಿತದ ವಿರುದ್ಧ ಹೋರಾಡಿದ ಬೆಳಗಾವಿಯ ಇನ್ನೊಬ್ಬ ಪ್ರಸಿದ್ಧ ವ್ಯಕ್ತಿಯೆಂದರೆ ಸಂಗೊಳ್ಳಿ ರಾಯಣ್ಣ. ಸ್ವಾಂತಂತ್ರ್ಯ ಪೂರ್ವ ಭಾರತದ ಇತಿಹಾಸದಲ್ಲು ಬೆಳಗಾವಿ ತನ್ನದೇ ಆದ ಪಾತ್ರವನ್ನ ಹೊಂದಿತ್ತು. ಡಿಸೆಂಬರ್ ೧೯೨೪ ರಲ್ಲಿ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ೩೯ ನೇ ಭಾರತೀಯ ಕಾಂಗ್ರೆಸ್ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಭೌಗೋಳಿಕ ಲಕ್ಷಣಗಳು ಬೆಳಗಾವಿ ನಗರ ಸಮುದ್ರ ಮಟ್ಟದಿಂದ ೨೫೦೦ ಅಡಿ (೭೬೨ ಮೀ)ಎತ್ತರದಲ್ಲಿದೆ. ರಾಜಧಾನಿ ಬೆಂಗಳೂರಿನಿಂದ ೫೦೨ ಕಿಮೀ ದೂರದಲ್ಲಿ ವಾಯುವ್ಯ ದಿಕ್ಕಿನಲ್ಲಿ ನೆಲೆಸಿದ್ದು ಇತರ ನೆರೆ ರಾಜಧಾನಿಗಳಾದ ಮುಂಬಯಿನಿಂದ ದಕ್ಷಿಣಕ್ಕೆ ಸುಮಾರು ೫೦೦ ಕಿಮೀ ಹೈದರಾಬಾದನಿಂದ ಪಶ್ಚಿಮಕ್ಕೆ ೫೧೫ ಕಿಮೀ ಹಾಗು ಗೋವಾ ರಾಜಧಾನಿ ಪಣಜಿಯಿಂದ ೧೫೯ ಕಿಮೀ ದೂರದಲ್ಲಿದೆ. ಸಹ್ಯಾದ್ರಿಯ ಮಡಿಲಲ್ಲಿ ಹಾಗು ಸಮೀಪದ ಅರಬ್ಬೀ ಸಮುದ್ರದಿಂದ ಕೇವಲ ೧೦೦ ಕಿಮೀ ಗಳಷ್ಟು ದೂರದಲ್ಲಿ ನೆಲೆಸಿರುವ ಒಂದು ಸುಂದರ ನಗರ. ಪ್ರತಿಕೂಲ ಹವಾಮಾನ, ಉತ್ತಮ ಮಳೆ, ಸಮೀಪದ ದಟ್ಟವಾದ ಅರಣ್ಯ ಜಿಲ್ಲೆಯ ಪ್ರಮುಖ ಲಕ್ಷಣಗಳು. ಕ್ಕೃಷ್ಣ, ಘಟ್ಟಪ್ರಭೆ, ಮಲಪ್ರಭ, ಮಾರ್ಖಂಡೇಯ, ಹಿರಣ್ಯಕೇಶಿ, ದೂದಗಂಗೆ-ವೇದಗಂಗೆ ಜಿಲ್ಲೆಯ ಪ್ರಮುಖ ನದಿಗಳು. ರಾಕಸಕೊಪ್ಪ ಜಲಾಶಯ,ಹಿಡಕಲ್ ಜಲಾಶಯ ಹಾಗು ನವಿಲುತೀರ್ಥ ಜಲಾಶಯಗಳು ಜಿಲ್ಲೆಗೆ ಒಳಪಟ್ಟಿವೆ. ಸಂಸ್ಕೃತಿ ವೈವಿದ್ಯತೆಗಳಲ್ಲಿ ಏಕತೆಯನ್ನು ಹೊಂದಿರುವ ಭಾರತದಂತೆ ಬೆಳಗಾವಿ ಕೂಡ ಹಲವು ಭಾಷಿಕರ ಹಾಗೂ ಹಲವು ಧರ್ಮೀಯರ ನೆಲೆಬೀಡು. ಕನ್ನಡ (ಆಡಳಿತ ಭಾಷೆ), ಹಿಂದಿ(ಕೇವಲ ನಗರದಲ್ಲಿ), ಮರಾಠಿ(ಕೇವಲ ನಗರದಲ್ಲಿ) ಇಲ್ಲಿ ಮಾತನಾಡಲ್ಪಡುವ ಪ್ರಮುಖ ಭಾಷೆಗಳು. ಉತ್ತರ ಕರ್ನಾಟಕದ ಸೊಗಡು ಇಲ್ಲಿಯ ಜೀವನ ಶೈಲಿಯ ವಿಶೇಷತೆ.ಇಲ್ಲಿನ ಇನ್ನೊಂದು ವಿ‍‍ಶೇಷವೆಂದರೆ ಜಾನಪದ ಕಲೆ. ಇಲ್ಲಿನ ಜನರು ವಿವಿಧ ಜನಪದ ಕಲೆಗಳನ್ನು ಕರಗತ ಮಾಡಿಕೊಂಡಿದ್ದಾರೆ. ಜಾನಪದ ಕಲೆಗಳಾದ ಲಾವಣಿ ಪದ, ರಿವಾಯಿತ ಜಾನಪದ, ಬೀಸುಕಲ್ಲಿನ ಪದ, ಹಂತಿ ಪದ, ಇತ್ಯಾದಿ. ಈ ರೀತಿಯಾಗಿ ವಿವಿಧತೆಯಲ್ಲಿ ಏಕತೆಯನ್ನು ಜನರು ಹೊಂದಿದ್ದಾರೆ. ಆರ್ಥಿಕತೆ, ಉದ್ಯಮಗಳು ಹಾಗು ವ್ಯಾಪಾರ ಬೆಳಗಾವಿ ಉತ್ತರ ಕರ್ನಾಟಕದ ವಾಣಿಜ್ಯ ಕೇಂದ್ರ. ತರಕಾರಿ, ಮೀನು, ಪೀಠೊಪಕರಣಗಳು, ಮರದ ದಿಮ್ಮೆಗಳು ಹಾಗು ಖನಿಜ ಅದಿರುಗಳಿಗೆ ಉತ್ತಮ ಮಾರುಕಟ್ಟೆ. ಬಾಕ್ಸೈಟ ಅದಿರು ಹೇರಳವಾಗಿ ದೊರುಕುವುದರಿಂದ ಬೆಳಗಾವಿಯಲ್ಲಿ ಅಲ್ಯುಮಿನಿಯಂ ಉತ್ಪಾದನಾ ಕೈಗಾರಿಕೆಯೊಂದು (Hindalco Industries)ಭಾರಿ ಪ್ರಮಾಣದ ಅಲ್ಯುಮಿನಿಯಂ ಉತ್ಪಾದಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಸಮೀಪದ ದೇಶನೂರ ಎಂಬಲ್ಲಿ ಯುರೇನಿಯಂ ಅದಿರು ಕೂಡ ದೊರೆತಿದೆ. ರಾಜಧಾನಿ ಬೆಂಗಳೂರಿನಂತೆ ಇಲ್ಲಿಯೂ ಐಟಿ ಉದ್ಯಮ (I T Industry) ಬೆಳೆಯುತ್ತಿದೆ. ಮೂಲತಹ ಬೆಳಗಾವಿಯಲ್ಲೆ ಆರಂಭಗೊಂಡು ವಿಶ್ವದಾದ್ಯಂತ ಸೇವೆ ಸಲ್ಲಿಸುತ್ತಿರುವ ಹಲವಾರು ಕಂಪನಿಗಳು ಇಲ್ಲಿವೆ ಹಾಗೂ ಬೆಳಗಾವಿಯಿಂದ ೬೦ ಕಿ.ಮಿ. ದೂರವಿರುವ ಗೋಕಾಕ್ ಫಾಲ್ಸ್ ದಲ್ಲಿ ಸುಮಾರು ೧೪೦ ವರುಶಗಳ ಹಳೆಯದಾದ್ದ ಜವಳಿ ಗಿರಣಿ ಇದೆ ಹಾಗೂ ಇಲ್ಲಿ ಪಾಂಡವರು ಕಟ್ಟಿದ್ದಾರೆ ಎಂದು ನಂಬಲಪಡುವ ಶ್ರೀ ತಡಸಲ ಮಹಾಲಿಂಗೇಶ್ವರ ದೇವಸ್ಥಾನ ಇದೆ. ೧೯೭೦ ರಿಂದ ಈಚೆ ಬೆಳಗಾವಿಯಲ್ಲಿ ಉದ್ಯಮಗಳ ಬೆಳವಣಿಗೆಯಾಯಿತು. ಮಶಿನ್ ಟೂಲ್ಸ (machine tools), ಹೈಡ್ರೊಲಿಕ್ hydrolic)ಉತ್ಪನ್ನಗಳು , ಕಾಸ್ಟಿಂಗ (casting) ಫೊರ್ಜಿಂಗನಂತಹ (forging) ನೂರಾರು ಉದ್ಯಮಗಳು ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ವಾಹನ ಉದ್ಯಮದ ಬಿಡಿಭಾಗಗಳು(Automotive Manufacturing), ಮುಖ್ಯವಾಗಿ ಕ್ರ್ಯಾಂಕ್ ಶಾಪ್ಟ (Crank-shaft)ನಂತಹ ವಸ್ತುಗಳ ತಯಾರಿಕಾ ಉದ್ಯಮಗಳು ಇಲ್ಲಿ ಕೇಂದ್ರೀಕೃತವಾಗಿವೆ . ಇತ್ತೀಚಿಗಷ್ಟೆ ಬೆಳಗಾವಿಯಲ್ಲಿ ವೈಮಾನಿಕ ತಂತ್ರಜ್ಞಾನಕ್ಕೆ ಸಂಬಂಧಪಟ್ಟಂತೆ ಹೊಸ ಉದ್ಯಮವೊಂದು (Quest engineering) ಕಾರ್ಯಾರಂಭ ಮಾಡಿದೆ. ಈ ಉದ್ಯಮ ವೈಮಾಣಿಕ ತಂತ್ರಜ್ನಾನಕ್ಕೆ ಸಂಬಂಧಪಟ್ಟಂತೆ ನಮ್ಮ ದೇಶದಲ್ಲೆ ಮೊದಲು ಸ್ಥಾಪನೆಯಾದ ಉದ್ಯಮ ಎನ್ನಲಾಗಿದೆ. ಇದಲ್ಲದೆ ರವಿವಾರ ಪೇಟೆಯಂತಹ ಇತರ ಮಾರುಕಟ್ಟೆಗಳು ಗ್ರಹೋಪಯೊಗಿ ವಸ್ತುಗಳಿಗೆ ಉತ್ತಮ ವ್ಯಾಪಾರ ಕಲ್ಪಿಸಿವೆ. ಶಿಕ್ಷಣ ಹಾಗೂ ವಿದ್ಯಾ ಸಂಸ್ಥೆಗಳು ಬೆಳಗಾವಿ ಕರ್ನಾಟಕದ ಒಂದು ಪ್ರಮುಖ ವಿದ್ಯಾ ಕೇಂದ್ರ. ೮ ಅಭಿಯಾಂತ್ರಿಕ ಕಾಲೇಜುಗಳು(engineering colleges),೫ ವೈದ್ಯಕೀಯ ಮಹಾವಿದ್ಯಾಲಯಗಳು , ಕೆಲವು ದಂತ ವಿದ್ಯಾಲಯಗಳು ಸೇರಿದಂತೆ ಹಲವಾರು ವಿದ್ಯಾಸಂಸ್ಥೆಗಳು ಇಲ್ಲಿವೆ. ಇಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕರ್ನಾಟಕದ ಅತೀ ದೊಡ್ಡ ತಾಂತ್ರಿಕ ವಿಶ್ವವಿದ್ಯಾಲಯವಾಗಿದೆ, ಸುಮಾರು ೧೪೦ ಕ್ಕೂ ಅಧಿಕ ತಾಂತ್ರಿಕ ವಿದ್ಯಾಲಯಗಳು ಈ ವಿಶ್ವವಿದ್ಯಾಲಯದ ಅಧೀನದೊಳಗೆ ಕಾರ್ಯನಿರ್ವಹಿಸುತ್ತವೆ ಅಲ್ಲದೇ ಸ್ನಾತಕೋತ್ತರ ವಿಭಾಗದಲ್ಲಿ M-Tech,MCA ನಂತಹ ಪದವಿಗಳು ಕೂಡ ವಿ.ತಾ.ವಿ ಅಧೀನದಲ್ಲಿವೆ. ಇದಲ್ಲದೆ ಅದೇ ರೀತಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿದೆ. ಇದರ ಬೆಳಗಾವಿ ಬಾಗಲಕೋಟೆ , ವಿಜಾಪುರ ಪದವಿ ಕಾಲೇಜುಗಳು ಇದರ ಅಧೀನದಲ್ಲಿವೆ . ಇತರೆ ಪದವಿ ಕಾಲೇಜುಗಳು,ಪಾಲಿಟೆಕ್ನಿಕ್ ವಿದ್ಯಾಲಯಗಳು, ಕಾನೂನು ಮಹಾವಿದ್ಯಾಲಯಗಳು ಕೂಡ ಇಲ್ಲಿವೆ. ಕೆ ಎಲ್ ಇ , ಕೆ ಎಲ್ ಎಸ್, ಗೋಮಟೇಶ , ಭರತೇಶ ಹಾಗು ಮರಾಠ ಮಂಡಳದಂತಹ ಹಲವಾರು ವಿದ್ಯಾಸಂಸ್ಥೆಗಳು ಸಾಕಷ್ಟು ಶೈಕ್ಷಣಿಕ ವಿದ್ಯಲಯಗಳನ್ನು ನಡೆಸುತ್ತಿವೆ. ಈ ಜಿಲ್ಲೆಯಲ್ಲಿ ಒಟ್ಟಾರೆ ತಾಂತ್ರಿಕ ಕ್ಷೇತ್ರಕ್ಕೆ ಸಂಭಂಧಿಸಿದಂತೆ ೯ ಪಾಲಿಟೆಕ್ನಿಕ್, ೫ ಇಂಜಿನೀಯರಿಂಗ್ ಮಹಾವಿದ್ಯಾಲ್ಯಗಳನ್ನು ಹೊಂದಿದೆ. ಹಾಗೂ ಅನೇಕ ವೈದ್ಯಕೀಯ, ದಂತವೈದ್ಯಕೀಯ, ಅನೇಕ ತಾಂತ್ರಿಕ ಮಹಾವಿದ್ಯಾಲಗಳನ್ನು ಹೊಂದಿದೆ. ಕೆ ಎಲ್ ಇ ಸಂಸ್ಥೆ (ಕರ್ನಾಟಕ ಲಿಂಗಾಯತ ಎಜುಕೇಶನ್ ಸೊಸೈಟಿ) ಇಸ್ವಿ ೧೯೧೬ ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಇಂದು ವಿಶ್ವದಾದ್ಯಂತ ಹಲವಾರು ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದೆ.ನವಂಬರ ೧೩,೧೯೧೬ ರಲ್ಲಿ ಕೆ ಎಲ್ ಇ ಸಂಸ್ಥೆ ಇಂದಿನ ಗಿಲಗಂಚಿ ಅರಟಾಳ ಪ್ರೌಢಶಾಲೆ ಹಾಗು ಪದವಿಪೂರ್ವ ಕಾಲೇಜ (G A High school) ನ್ನು ಆರಂಭಿಸಿತು.ಇದೇ ರೀತಿ ೧೯೩೩ ರ ಜೂನ್ ನಲ್ಲಿ ಲಿಂಗರಾಜ ಕಾಲೇಜ್, ೧೯೪೭ರಲ್ಲಿ ಹುಬ್ಬಳ್ಳಿಯ ಬಿ,ವಿ ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯ, ೧೯೬೩ ರಲ್ಲಿ ಬೆಳಗಾವಿಯ ಜವಾಹರ ಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಹಾಗು ಹಾವೇರಿಯ ಜಿ,ಎಚ್ ಕಾಲೇಜ್ ಆರಂಭವಾದವು. ೧೯೮೪ ರಿಂದ ಈಚೆಗೆ ವೈದ್ಯಕೀಯ,ದಂತ ವೈದ್ಯಕೀಯ,ಮಾಹಿತಿ ತಂತ್ರಜ್ಞಾನ,ಕಂಪ್ಯೂಟರ ತಂತ್ರಜ್ಞಾನ,ಹೊಟೆಲ್ ಮ್ಯಾನೇಜಮೆಂಟ,ಬ್ಯುಸಿನೆಸ್ ಮ್ಯಾನೇಜಮೆಂಟ,ಪ್ಯಾಶನ್ ಡಿಸೈನಿಂಗ,ಕೃಷಿ ವಿದ್ಯಾಲಯಗಳು ಹಾಗೂ ಇತರ ಎಲ್ಲಾ ಶೈಕ್ಷಣಿಕ ಕ್ಷೇತ್ರಗಳಿಗೂ ವಿಸ್ತಾರವಾಗಿ ಇಂದು ಶ್ರೀ ಪ್ರಭಾಕರ ಕೋರೆಯವರ ನೇತೃತ್ವದಲ್ಲಿ ೨೦೦ ಕ್ಕಿಂತಲೂ ಹೆಚ್ಚಿನ ಶೈಕ್ಷಣಿಕ ವಿದ್ಯಾಲಯಗಳನ್ನು ಒಳಗೊಂಡಿದೆ. ಸರಕಾರಿ ಪಾಲಿಟೆಕ್ನಿಕ್ ಬೆಳಗಾವಿ ಇದು ಕರ್ನಾಟಕ ಸರಕಾರದಿಂದ ನಡೆಸಲ್ಪಡುತ್ತಿರುವ ಒಂದು ಸ್ವಾಯತ್ತ ಸಂಸ್ಥೆಯಾಗಿದೆ. ಇಲ್ಲಿ ಅನೇಕ ತಾಂತ್ರಿಕ ಕಲೆಗಳನ್ನು ಹೇಳಿಕೊಡಲಾಗುತ್ತದೆ. ಕಮರ್ಷಿಯಲ್ ಪ್ರಾಕ್ಟೀಸ್, ಸಿವ್ಹಿಲ್, ಆಟೋಮೋಬೈಲ್, ಮೆಕ್ಯಾನಿಕಲ್, ವಿದ್ಯುತ್ ಮತ್ತು ವಿದ್ಯುನ್ಮಾನ್, ವಿದ್ಯುನ್ಮಾನ್ ಮತ್ತು ಸಂವಹಣೆ ವಿಭಾಗಗಳನ್ನು ಹೊಂದಿದೆ. ಇದು ಅತ್ಯುತ್ತಮ ಸಿಬ್ಬಂದಿಯನ್ನು ಹೊಂದಿರುವುದರಿಂದ ಸಹಜವಾಗಿಯೇ ಹೆಸರುವಾಸಿಯಾಗಿದೆ. ಬಿ.ಇ. ಲ್ಯಾಟರಲ್ ಎಂಟ್ರಿಗೆ ನಡೆಯುವ ಸಿ.ಇ.ಟಿ. ಯಲ್ಲಿ ಪ್ರತಿ ವರ್ಷವು ರಾಜ್ಯಕ್ಕೆ ಪ್ರಥಮ ಸ್ಥಾನ ಹೊಂದಿರುವುದು ಇದರ ಹೆಗ್ಗಳಿಕೆಯಾಗಿದೆ. ತಾಲೂಕುಗಳು ಬೆಳಗಾವಿ ಗೋಕಾಕ ಹುಕ್ಕೇರಿ ಬೈಲಹೊಂಗಲ ಸವದತ್ತಿ ರಾಮದುರ್ಗ ಅಥಣಿ ಚಿಕ್ಕೋಡಿ ರಾಯಬಾಗ್ ಖಾನಾಪುರ ಕಿತ್ತೂರು ಕಾಗವಾಡ ನಿಪ್ಪಾಣಿ ಮೂಡಲಗಿ ಪ್ರೇಕ್ಷಣೀಯ ಸ್ಥಳಗಳು ಮತ್ತು ಆಕರ್ಷಣೆಗಳು ಹಳೆಯ ಕಲ್ಲಿನ ಕೋಟೆ (೧೫೧೯ ರಲ್ಲಿ ಕಟ್ಟಿದ್ದೆಂದು ನಂಬಲಾಗಿದೆ) ಕೋಟೆ ಕೆರೆ ವೀರ ಸೌಧ ಕಮಲ ಬಸದಿ ಸುವರ್ಣ ಸೌಧ ಸ್ವಾಮಿ ವಿವೇಕಾನಂದ ಆಶ್ರಮ ಕಪಿಲೇಶ್ವರ ದೇವಸ್ಥಾನ ಹಿಡಕಲ್ ಜಲಾಶಯ ಮುನವಳ್ಳಿಯ ನವಿಲುತೀರ್ಥ ಜಲಾಶಯ ಮೂಡಲಗಿಯ ಕಬ್ಬು ಮಾರುಕಟ್ಟೆ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಗೋಕಾಕ್ ಜಲಪಾತ - ಘಟಪ್ರಭಾ ನದಿಯ ಜಲಪಾತ + ಗೊಡಚಿನಮಲ್ಕಿ ಜಲಪಾತ ಕಿತ್ತೂರಿನಲ್ಲಿರುವ ರಾಣಿ ಚೆನ್ನಮ್ಮ ಕೋಟೆ ರಾಣಿ ಚೆನ್ನಮ್ಮನ ಸಮಾಧಿ, ಬೈಲಹೊಂಗಲ. ಚಿಂಚಲಿ ಮಾಯಕ್ಕಾ ದೇವಸ್ಥಾನ, ಸರಕಾರ ವಾಡೆ. ಕುಡಚಿ ರೈಲು ಸೇತುವೆ ರಾಯಬಾಗದ ರಾಜವಾಡೆ ಭಾಷೆಗಳು ಬೆಳಗಾವಿ ಜಿಲ್ಲೆಯಲ್ಲಿ ಮಾತನಾಡಲ್ಪಡುವ ಮುಖ್ಯ ಭಾಷೆಗಳು ಕನ್ನಡ, ಮತ್ತು ಮಹಾರಾಷ್ಟ್ರದ ಸಾಮೀಪ್ಯದಿಂದಾಗಿ ಮರಾಠಿ, ಈ ಎರಡು ಭಾಷೆಗಳಲ್ಲದೆ ಸಾಮಾನ್ಯವಾಗಿ ಹಿಂದಿ ಹಾಗು ಕೊಂಕಣಿ ಭಾಷೆಗಳು ಕೂಡ ಇಲ್ಲಿ ಮಾತನಾಡಲ್ಪಡುತ್ತವೆ . ಇವನ್ನೂ ನೋಡಿ ಬೆಳಗಾವಿ ಗಡಿ ವಿವಾದ ಬೆಳಗಾವಿ (ಲೋಕ ಸಭೆ ಚುನಾವಣಾ ಕ್ಷೇತ್ರ) ಕನ್ನಡ ನೆಲದಲ್ಲಿ ಗಾಂಧಿ: ಬೆಳಗಾವಿಯಲ್ಲಿ ಗಾಂಧೀಜಿ ರಾಷ್ಟ್ರೀಯ ಕಾಂಗ್ರೆಸ್ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಸುತ್ತೋಣಬನ್ನಿ ಹೊರಗಿನ ಸಂಪರ್ಕಗಳು ಬೆಳಗಾವಿ ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ ಬೆಳಗಾವಿ ಪ್ರವಾಸ ಬೆಂಗಳೂರಿನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆ ಕರ್ನಾಟಕದ ಜಿಲ್ಲೆಗಳು ಐತಿಹಾಸಿಕ ಸ್ಥಳಗಳು ಕರ್ನಾಟಕದ ಪ್ರಮುಖ ಸ್ಥಳಗಳು ಬೆಳಗಾವಿ ಜಿಲ್ಲೆ
1069
https://kn.wikipedia.org/wiki/%E0%B2%AC%E0%B2%BE%E0%B2%97%E0%B2%B2%E0%B2%95%E0%B3%8B%E0%B2%9F%E0%B3%86
ಬಾಗಲಕೋಟೆ
ಬಾಗಲಕೋಟೆ ಕರ್ನಾಟಕದ ಒಂದು ಜಿಲ್ಲಾ ಕೇಂದ್ರ. ಈ ಜಿಲ್ಲೆ ಉತ್ತರ ಕರ್ನಾಟಕದಲ್ಲಿ ಸ್ಥಾಪಿತವಾಗಿದೆ. ಮತ್ತು ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಿಜಾಪುರಗಳೊಂದಿಗೆ ತನ್ನ ಗಡಿಯನ್ನು ಹೊಂದಿದೆ. ೧೯೯೭ರಲ್ಲಿ ಭಾರತದ ೫೦ನೆಯ ಸ್ವಾತಂತ್ರ್ಯೋತ್ಸವದ ಸ್ಮರಣೀಯ ಘಟ್ಟದಲ್ಲಿ ಕರ್ನಾಟಕ ಸರ್ಕಾರದ ಪ್ರಕಟಣೆ ಆರ್‌ಡಿ ೪೨ ಎಲ್ಆರ್‌ಡಿ ೮೭ ಭಾಗ ೩ ನಿರ್ದೇಶದ ದ್ವಾರಾ ಹೊಸ ಜಿಲ್ಲೆಯಾಗಿ ಅಂದಿನ ಮುಖ್ಯಮಂತ್ರಿ ಜೆ. ಎಚ್. ಪಟೇಲರಿಂದ ಉದ್ಘಾಟಿಸಲ್ಪಟ್ಟಿತು. ಐತಿಹಾಸಿಕವಾಗಿ ಬಾಗಲಕೋಟೆ ಜಿಲ್ಲೆಯು ಚಾಲುಕ್ಯರಾಳಿದ ನಾಡು. ಬಾದಾಮಿ, ಐಹೊಳೆ, ಪಟ್ಟದಕಲ್ಲು, ಕೂಡಲಸಂಗಮ ಮತ್ತು ಮಹಾಕೂಟ ಇಲ್ಲಿಯ ಅತ್ಯಂತ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಾಗಿವೆ. ಭೌಗೋಳಿಕ ಬಾಗಲಕೋಟೆ ನಗರವು ಭಾರತದ ಕರ್ನಾಟಕ ರಾಜ್ಯದ ಉತ್ತರ ಭಾಗದಲ್ಲಿ ಸ್ಥಿತವಾಗಿದೆ. ಭೌಗೋಳಿಕವಾಗಿ ಉತ್ತರದ ಕಡೆ 16-18* & 75-7* ಪೂರ್ವದಲ್ಲಿ ಘಟಪ್ರಭಾ ನದಿಯ ದಡದಲ್ಲಿ ಸ್ಥಿತವಾಗಿರುವ ಇದು ಸಮುದ್ರ ಮಟ್ಟದಿಂದ 533 ಮೀಟರ್ ಎತ್ತರದಲ್ಲಿದ್ದು ಜಿಲ್ಲೆಯ ಕೇಂದ್ರ ಸ್ಥಾನವಾಗಿದೆ. ಈ ಮೊದಲು ಬಿಜಾಪುರ (ಈಗಿನ ವಿಜಯಪುರ) ಜಿಲ್ಲೆಯಲ್ಲಿದ್ದ ಬಾಗಲಕೋಟೆ ಭಾರತದ 50ನೇಯ ಸ್ವಾತಂತ್ರ್ಯ ವರ್ಷಾಚರಣೆಯ ಸಂದರ್ಭದಲ್ಲಿ ಅಂದರೆ 1997 ರಲ್ಲಿ ಹೊಸ ಜಿಲ್ಲೆಯಾಗಿ ಅಸ್ಥಿತ್ವಕ್ಕೆ ಬಂದಿತು. ವಿಜಾಪುರ ಜಿಲ್ಲೆಯಿಂದ ಹೋಳಾದ ಬಾಗಲಕೋಟ ಜಿಲ್ಲೆಯು ಬಾದಾಮಿ, ಬಾಗಲಕೋಟ, ಬೀಳಗಿ, ಹುನಗುಂದ, ಜಮಖಂಡಿ & ಮೂಧೋಳ ಈ 6 ತಾಲ್ಲೂಕುಗಳನ್ನು ಹೊಂದಿದೆ. 2018 ರಲ್ಲಿ ಗುಳೇದಗುಡ್ಡ, ಇಳಕಲ್ಲ & ರಬಕವಿ-ಬನಹಟ್ಟಿ ಇವು 3 ಹೊಸ ತಾಲ್ಲೂಕು ಕೇಂದ್ರಗಳಾಗಿ ಸೃಷ್ಠಿಯಾಗಿದೆ. ಒಂದು ಕಾಲದಲ್ಲಿ ಕನ್ನಡದ ವೈಭವಯುತ ರಾಜಮನೆತನವಾದ ಚಾಲುಕ್ಯರು ಬಾಗಲಕೋಟ ಜಿಲ್ಲೆಯನ್ನು ಆಳಿದರು. ಕರ್ನಾಟಕದ ಉತ್ತರ ಭಾಗದಲ್ಲಿರುವ ಈ ಜಿಲ್ಲೆಯ 6593 ಚದರ ಮೀಟರ ವ್ಯಾಪ್ತಿಯನ್ನು ಹೊಂದಿದೆ. ಬಾಗಲಕೋಟ ಜಿಲ್ಲೆಯ ಉತ್ತರಕ್ಕೆ ವಿಜಾಪುರ ಜಿಲ್ಲೆ (ಈಗಿನ ವಿಜಯಪುರ), ದಕ್ಷಿಣಕ್ಕೆ ಗದಗ ಜಿಲ್ಲೆ, ಪೂರ್ವಕ್ಕೆ ರಾಯಚೂರು ಜಿಲ್ಲೆ & ಆಗ್ನೆಯ ಬಾಗದಲ್ಲಿ ಕೊಪ್ಪಳ ಜಿಲ್ಲೆ, ಪಶ್ಶಿಮ ಗಡಿಯಲ್ಲಿ ಬೆಳಗಾವಿ ಜಿಲ್ಲೆಗಳಿಂದ ಸುತ್ತುವರಿಯಲ್ಪಟ್ಟಿದೆ. ಇತಿಹಾಸ ಇಲ್ಲಿ ದೊರೆತ ಶಿಲಾಶಾಸನಗಳ ಪ್ರಕಾರ ಮೂಲ ಹೆಸರು ಬಾಗಡಿಗೆ ಎಂದು ಆಗಿತ್ತು. ಪುರಾಣಗಳ ಪ್ರಕಾರ ಲಂಕಾಧಿಪತಿಯಾದ ರಾವಣ ಈ ಪ್ರದೇಶವನ್ನು ಆಳುತ್ತಿದ್ದ, ಅವನು ಈ ನಗರವನ್ನು ಬಜಂತ್ರಿ (ಸಂಗೀತಗಾರರು) ಗೆ ಕೊಡುಗೆಯಾಗಿ ನೀಡಿದ್ದನು. ಬಿಜಾಪುರ ರಾಜರು ತನ್ನ ಮಗಳಿಗೆ ಕಂಕಣ ಕಾಣಿಕೆ (ಮಗಳ ಮದುವೆ ನಂತರ ಬಳೆ, ಸೀರೆ, ಆಭರಣಗಳ ಖರೀದಿಸಲು ತಂದೆ-ತಾಯಿ ಹಣ ಕೋಡುವ ಸಂಪ್ರದಾಯದಂತೆ) ಯಾಗಿ ಈ ಪಟ್ಟಣವನ್ನು ಕೊಡುಗೆಯಾಗಿ ನೀಡಿದನು ಎಂದು ಹೇಳಲಾಗುತ್ತದೆ. ಪರಿಣಾಮವಾಗಿ ಪಟ್ಟಣದ ಹೆಸರು "ಬಾಗಡಿಕೋಟೆ"ಯಾಗಿ ನಂತರ ಬಾಗಲಕೋಟೆಯಾಗಿ ಮಾರ್ಪಟ್ಟಿತು. ನಂತರದ ದಿನಗಳಲ್ಲಿ ಬಾಗಲಕೋಟೆ ವಿಜಯನಗರ ದೊರೆಗಳ, ಪೇಶ್ವೆಗಳ, ಮೈಸೂರಿನ ಹೈದರಾಲಿ, ಮರಾಠ ಆಡಳಿತಗಾರರು ಮತ್ತು ಅಂತಿಮವಾಗಿ 1818 ರಲ್ಲಿ ಬ್ರಿಟಿಷ್ ಆಳ್ವೆಕೆಗೆ ಒಳಗಾಯಿತು. 1865 ರಲ್ಲಿ ಪುರಸಭೆಯಾಗಿ ಅಸ್ಥಿತ್ವಕ್ಕೆ ಬಂದಿತು. ಬಾಗಲಕೋಟೆಯು "ಸ್ವಾತಂತ್ರ್ಯ ಚಳುವಳಿ" ಮತ್ತು "ಕರ್ನಾಟಕ ಏಕೀಕರಣ ಚಳುವಳಿ"ಗಳಿಗೆ ಕೇಂದ್ರವಾಗಿತ್ತು. ಇಂದು, ಬಾಗಲಕೋಟೆ ಪಟ್ಟಣ ಎರಡು ಭಾಗಗಳಲ್ಲಿ ಹಂಚಿ ಹೋಗಿದೆ, ಹೊಸ ಬಾಗಲಕೋಟೆ ಅಥವಾ ನವನಗರ ಮತ್ತು ಹಳೆಯ ಬಾಗಲಕೋಟೆ ಪಟ್ಟಣ. ಆಲಮಟ್ಟಿ ಅಣೆಕಟ್ಟಿನ ನಿರ್ಮಾಣದಿಂದಾಗಿ ಹಳೆಯ ಪಟ್ಟಣದ ಬಹುತೇಕ ಭಾಗಗಳು ಮುಳುಗಡೆ ಹೋದಿದೆ. ಆ ಕಾರಣದಿಂದ ಹೊಸ ನವನಗರ ನಿರ್ಮಾಣ ಅನಿವಾರ್ಯವಾಯಿತು. ನವನಗರವು ವಿಶಾಲ ರಸ್ತೆಗಳು, ಉದ್ಯಾನಗಳು, ಮತ್ತು ಇತರ ಆಧಿನಿಕ ಸೌಲಭ್ಯಗಳನ್ನು ಹೊಂದಿ ಮಾದರಿ ವಿನ್ಯಾಸದಿಂದ ಯೋಜಿತ ರೀತಿಯಲ್ಲಿ ಕಟ್ಟಿದ ಪಟ್ಟಣವಾಗಿದೆ. ಬಾಗಲಕೋಟ್ ನವನಗರದ ಪ್ರಧಾನ ವಾಸ್ತುಶಿಲ್ಪಿ ಛಾರ್ಲ್ಸ್ ಕೋರಿಯಾ. ನದಿಗಳು ಇಲ್ಲಿ ಘಟಪ್ರಭಾ, ಮಲಪ್ರಭಾ, ಮತ್ತು ಕೃಷ್ಣಾ ನದಿಗಳು ಹರಿಯುತ್ತವೆ. ಶಿಕ್ಷಣ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ, ಬಾಗಲಕೋಟ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ, ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟ ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘ, ಇಲಕಲ್ಲ ತಾಲೂಕುಗಳು ಜಮಖಂಡಿ ಮುಧೋಳ ಬೀಳಗಿ ಬಾಗಲಕೋಟ ಬಾದಾಮಿ ಹುನಗುಂದ ಇಲಕಲ್ ಗುಳೇದಗುಡ್ಡ ರಬಕವಿ - ಬನಹಟ್ಟಿ ಇದನ್ನೂ ನೋಡಿ ಬಾಗಲಕೋಟ (ಲೋಕ ಸಭೆ ಚುನಾವಣಾ ಕ್ಷೇತ್ರ) ಹೊರಗಿನ ಸಂಪರ್ಕ ಬಾಗಲಕೋಟ ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ ಕರ್ನಾಟಕದ ಜಿಲ್ಲೆಗಳು
1071
https://kn.wikipedia.org/wiki/%E0%B2%AC%E0%B3%80%E0%B2%A6%E0%B2%B0%E0%B3%8D
ಬೀದರ್
ಬೀದರ್ (ಕನ್ನಡ: ಬೀದರ, ಉರ್ದು: بیدار) ಒಂದು ಡೆಕ್ಕನ್ ಪ್ರಸ್ಥಭೂಮಿಯಲ್ಲಿರುವ, ಬೆಟ್ಟದ ತುದಿಯಲ್ಲಿರುವ ನಗರ. ಇದು ಭಾರತದ ಕರ್ನಾಟಕ ರಾಜ್ಯದ ಪೂರ್ವಭಾಗದಲ್ಲಿದೆ. ಇದು ಬೀದರ್ ಜಿಲ್ಲೆಯ ಜಿಲ್ಲಾಕೇಂದ್ರ. ಬೀದರ್ ಜಿಲ್ಲೆ ಮಹಾರಾಷ್ಟ್ರ ಮತ್ತು ತೆಲಂಗಾಣದೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಇದು ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ ಮತ್ತು ಇದು ಬೀದರ್ ಮಹಾನಗರ ವಲಯಕ್ಕೆ ಸೇರುತ್ತದೆ. ಈ ನಗರವು ಅನೇಕ ವಾಸ್ತುಶಿಲ್ಪ, ಐತಿಹಾಸಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿರುವ ಅನೇಕ ಸ್ಥಳಗಳಿಗೆ ಹೆಸರುವಾಸಿಯಾಗಿದೆ. ಉಗಮ ಬೀದರ್ ಎಂಬ ಹೆಸರು ಬಿದಿರುನಿಂದ ಬಂದಿದೆ ಎಂದು ನಂಬಲಾಗಿದೆ. ಹಿಂದೆ ಇದು ಇಲ್ಲಿ ಇದ್ದ ಬಿದಿರಿನ ಗೊಂಚಲುಗಳಿಗೆ ಪ್ರಖ್ಯಾತವಾಗಿತ್ತು, ಆದ್ದರಿಂದ ಇದನ್ನು ಬಿದಿರೂರು ಎಂದು ಕರೆಯಲಾಗುತಿತ್ತು ಮತ್ತು ಆಮೇಲೆ ಬಿದರೆ, ಬೀದರ್ ಎಂದು ಹೆಸರು ಬದಲಾಗಿದೆ. ಆದರೂ ಬಿದಿರು ಅಥಾವ ಬಿದಿರಿನ ಉತ್ಪನ್ನಗಳು, ಬೀದರ್ ನಗರದಲ್ಲಾಗಲಿ ಅದರ ಸುತ್ತಲಿನ ಪರಿಸರದಲ್ಲಾಗಲಿ ಇಲ್ಲ. ದಂತಕಥೆಗಳ ಪ್ರಕಾರ ಬೀದರ್ ಗೆ ಪ್ರಾಚೀನ ಸಾಮ್ರಾಜ್ಯ ವಿದರ್ಭ ಜೊತೆ ಸಂಭಂದವಿದೆ ಎಂದು ಹೇಳುತ್ತಾರೆ. ವಿದರ್ಭ ಬಗ್ಗೆ ಪ್ರಾಚೀನ ಹಿಂದು ಗ್ರಂಥಗಳಾದ ಮಾಳವಿಕಾಗ್ನಿಮಿತ್ರ , ಮಹಾಭಾರತ, ಹರಿವಂಶ , ಭಾಗವತ ಮತ್ತು ಕೆಲವು ಇತರೆ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ.ಈ ಎರಡು ನಗರಗಳ ಸಂಬಂಧವನ್ನು ಬೀದರ್ ಮತ್ತು ವಿದರ್ಭ ಹೆಸರಿನಲ್ಲಿ ಇರುವ ಹೋಲಿಕೆಗಳಿಂದ ಸ್ಪಷ್ಟವಾಗಿ ಕಾಣಬಹುದು. ಇದನ್ನು ಫರಿಶ್ತಾ ಬರಹದಲ್ಲಿ ಪ್ರಸ್ತಾಪಿಸಲಾಗಿದೆ. ಇಲ್ಲಿನ ಸಾಂಪ್ರದಾಯಿಕ ಕಥೆಗಳು, ಇಲ್ಲಿ ವಿದುರ ವಾಸವಾಗಿದ್ದನೆಂದು ಹೇಳುತ್ತದೆ. ಅದ್ದರಿಂದ ಇದನ್ನು ಹಿಂದೆ ವಿದುರನಗರ ಎಂದು ಕರೆಯಲಾಗುತ್ತಿತ್ತು ಮತ್ತು ಇದು ನಳ ಮತ್ತು ದಮಯಂತಿ (ರಾಜ ಭೀಮನ ಮಗಳು ಮತ್ತು ವಿದರ್ಭದ ರಾಜ) ಭೇಟಿಯಾಗುವ ಸ್ಥಳವೂ ಆಗಿತ್ತು. ಇತಿವೃತ್ತ ಬೀದರ್ - ಕರ್ನಾಟಕ ರಾಜ್ಯದ ಉತ್ತರ ತುದಿಯಲ್ಲಿರುವ ಜಿಲ್ಲೆ. ಬೀದರ ನಗರವು ಈ ಜಿಲ್ಲೆಯ ಜಿಲ್ಲಾ ಕೇಂದ್ರವಾಗಿದೆ. ಭಾಲ್ಕಿ, ಹುಮನಾಬಾದ್, ಬೀದರ್, ಬಸವಕಲ್ಯಾಣ ಮತ್ತು ಔರಾದ ತಾಲೂಕುಗಳ ೬೨೨ ಹಳ್ಳಿಗಳು ಈ ಜಿಲ್ಲೆಯಲ್ಲಿವೆ. ಬೀದರ್ ಜಿಲ್ಲೆಯು ಸಾಂಸ್ಕೃತಿಕವಾಗಿ ಕರ್ನಾಟಕದ ಅತ್ಯಂತ ಪ್ರಮುಖ ಜಿಲ್ಲೆಗಳಲ್ಲೊಂದು. ಹಿಂದೆ ಬೀದರ್ ಜಿಲ್ಲೆಯು ಬಿಜಾಪುರದ ಬಹಮನಿ ಸುಲ್ತಾನರ ಆಳ್ವಿಕೆಯಲ್ಲಿತ್ತು. ಬಹಮನಿ ಸುಲ್ತಾನರ ಆಳ್ವಿಕೆಯಲ್ಲಿ ಬೀದರ್, ಬಿಜಾಪುರ, ಗೋಲ್ಕೊಂಡ, ಗುಲ್ಬರ್ಗಾ ಮತ್ತು ಬಿರಾರ್ ಸಂಸ್ಥಾನಗಳೂ ಸೇರಿದ್ದವು ಎಂಬುದನ್ನು ಗಮನಿಸಬಹುದು. ಬೀದರ್ ಜಿಲ್ಲೆಯು ಬಸವಕಲ್ಯಾಣದಿಂದ ಉಗಮಿಸಿದ ಶರಣರ ಸಾಂಸ್ಕೃತಿಕ ಕ್ರಾಂತಿಯನ್ನೂ ಕಂಡಿದೆ. ಬಸವಕಲ್ಯಾಣದಲ್ಲಿ ಜನಿಸಿದ ಶೈವ ಸಂಸ್ಕೃತಿಯು ವಿಶ್ವಾದ್ಯಂತ ಪಸರಿಸಿ, ನಮ್ಮ ರಾಜ್ಯಕ್ಕೆ ಈಗಿರುವ ವಿಶೇಷ ಮಹತ್ವವನ್ನು ತಂದಿದೆ. ಬೀದರ್ ನಗರದಲ್ಲಿರುವ ವಾಯುಪಡೆ ತರಬೇತಿ ಕೇಂದ್ರವು ಆಗಸದಲ್ಲಿ ತ್ರಿವರ್ಣ ಚಿಮ್ಮುತ್ತಾ ವಿವಿಧ ಕಸರತ್ತು ಪ್ರದರ್ಶಿಸುವ ಸೂರ್ಯಕಿರಣ ವೈಮಾನಿಕ ತಂಡದಿಂದ ಪ್ರಸಿದ್ಧವಾಗಿದೆ. ಪ್ರಸ್ತುತ ಇಲ್ಲಿ ಬ್ರಿಟನ್ನಿನ ಹಾಕ್ ವಿಮಾನಗಳ ಪ್ರಾಯೋಗಿಕ ತರಬೇತಿ ನಡೆದಿದೆ. ಜಿಲ್ಲೆಯ ಭಾಲ್ಕಿ ಪಟ್ಟಣವು ದಲಿತೋದ್ದಾರ ಹಾಗೂ ಕನ್ನಡಕ್ಕಾಗಿ ಅಪಾರ ಸೇವೆ ಸಲ್ಲಿಸಿದ ಶತಾಯುಷಿ ಡಾ.ಚೆನ್ನಬಸವ ಪಟ್ಟದ್ದೇವರಿಂದಾಗಿ ಪ್ರಖ್ಯಾತವಾಗಿದೆ. ಭೌಗೋಳಿಕ ವಿವರಗಳು ಬೀದರ್ ನಗರ ಸುಮಾರು 615 ಮೀಟರ್ (2017 ಅಡಿ) ಒಂದು ಸರಾಸರಿ ಉನ್ನತಿಯನ್ನು ಹೊಂದಿದೆ.ಬೀದರ್ ನಗರದ ಹಳೆಯ ಹೆಸರು ’ಮೊಹಮ್ಮದಾಬಾದ್’. ಬೀದರ್ ಜಿಲ್ಲೆಯಾದ್ಯಂತ ಸರಾಸರಿ ವರ್ಷ ಪೂರ್ತಿ ಇರುವ ತನ್ನ ಬಿಗಿಯಾದ ಹಾಗೂ ಬಲವಾದ ಹವಾಮಾನದಿಂದ ಪ್ರಾಯೋಗಿಕವಾಗಿಯೂ, ಆಕರ್ಷಕವಾಗಿಯೂ ಮನೋಹರ ನಗರವೆಂದು ಪ್ರಸಿದ್ಧಿಯಾಗಿದೆ. ಏಪ್ರಿಲ್ ಮತ್ತು ಮೇ ಬೇಸಿಗೆ ತಿಂಗಳುಗಳಾದರೂ ಕೂಡ ಈ ಬಿಸಿ ಹವಾಮಾನದ ಅವಧಿಯಲ್ಲಿ, ಶಾಖ ಹೆಚ್ಚಾದಾಗ ಹಠಾತ್ತಾಗಿ ಸುರಿಯುವ ಅಬ್ಬರದ ವರ್ಷಧಾರೆಯಿಂದ ಬಿಸಿಯ ತಾಪ ಕಡಿಮೆಯಾಗಿ ಬಿಡುತ್ತದೆ. ಜೂನ್ ತಿಂಗಳ ಆರಭದಲ್ಲೇ ನೈಋತ್ಯ ಮುಂಗಾರು ತನ್ನ ಪೂರ್ಣ ಮನೋಹರತೆಯೊಂದಿಗೂ ಮತ್ತು ತಂಪಾದ ಹವೆಯೊಂದಿಗೂ ಹವಾಮಾನವನ್ನು ಜೊತೆ ಹೊಂದಿಸಿಕೊಂಡು ಜಿಲ್ಲೆಗೆ ತನ್ನ ಎಂದಿನ ಬಿಗಿಯಾದ ಆಹ್ಲಾದಕರವಾದ ಹವಾಮಾನದ ವೈಭವವನ್ನು ಮರಳಿ ಹೊಂದಿಸಿ ಬಿಡುತ್ತದೆ. ಇಲ್ಲಿ ಶೀತ ಹವಾಮಾನ ಎಂದಿಗೂ ಅತಿ ತಂಪಾಗಿ ಇರುವುದಿಲ್ಲ ಮತ್ತು ಮಳೆಯೂ ಎಂದಿಗೂ ಅತಿಯಾಗಿರುವುದಿಲ್ಲ. ಆದರೆ ಅದರಲ್ಲಿರುವ ವಿಪರೀತ ಬದಲಾವಣೆಗಳ ಲಕ್ಷಣವೇ ಜಲಕ್ಷಾಮಕ್ಕೂ ಮತ್ತು ದೇಹಾಲಸ್ಯಕ್ಕೂ ಕಾರಣವಾಗಿದೆ. ಬೀದರ್ ಜಿಲ್ಲೆಯ ಒಂದು ಮುಖ್ಯವಾದ ಮೋಡಿ ಯ ಅಂಶವೆಂದರೆ, ಜಿಲ್ಲೆಯ ಪ್ರತಿಯೊಂದು ಹಳ್ಳಿಯಲ್ಲಿಯೂ ಬೆಚ್ಚಿ ಬೀಳಿಸುವಂತಹ ಇತಿಹಾಸದ ಸ್ಮಾರಕಗಳು, ದಂತಕಥೆಗಳು, ಸುಂದರವಾದ ರಾಜಕುಮಾರಿಯರ ಪ್ರೇಮ ಕಥೆಯಗಳು, ಮರೆತು ಹೋದ ದೀರ್ಘ ಕದನಗಳ ವಿವರಗಳು, ಹಗೆತನದ ಕಥೆಗಳು ಮತ್ತು ಮಿಲಿಟರಿ ಸಾಹಸ ಗಳು ತುಂಬಿರುವುದು. ಮಧ್ಯಯುಗದ ಹಿಂದೂ ಧರ್ಮದ ಅಡಿಪಾಯವನ್ನು ಮತ್ತು ಅಸ್ತಿತ್ವವನ್ನು ನಡುಗಿಸಿದ ಸಾಮಾಜಿಕ ಸುಧಾರಣಾ ಚಳುವಳಿಗಳಿಗಳು ಕೂಡ ಬೀದರ್ ಜಿಲ್ಲೆಯ ಮುಖ್ಯ ಆಕರ್ಷಣೆಗಳಲ್ಲೊಂದು. ಬೀದರ್ ಜಿಲ್ಲೆಯ ಇಂದಿನ ಒಳಹರವಿನ ಒಟ್ಟು ಭೂಮಿಯು 5448 ಚದರ ಕಿಲೋಮೀಟರ್ ನಷ್ಟು ವಿಸ್ತಾರದಲ್ಲಿ 17 O 35 !! ಮತ್ತು 18 o 25 !! ಉತ್ತರ ಅಕ್ಷಾಂಶದಲ್ಲಿ ಮತ್ತು 760 42 !! ಮತ್ತು 770 39! ಪೂರ್ವ ರೇಖಾಂಶದಲ್ಲಿ, ಆಂಧ್ರಪ್ರದೇಶದ ನಿಜಾಮಾಬಾದ್ ಮತ್ತು ಮೇಡಕ್ ಜಿಲ್ಲೆಗಳೊಂದಿಗೂ ಪಶ್ಚಿಮಕ್ಕೆ ಮಹಾರಾಷ್ಟ್ರದ ನಾಂದೇಡ್ ಮತ್ತು ಉಸ್ಮಾನಾಬಾದ್ ಜಿಲ್ಲೆಗಳೊಂದಿಗೂ ಹೊಂದಿಕೊಂಡಿದೆ. ದಕ್ಷಿಣದಲ್ಲಿ ಕರ್ನಾಟಕದ ಗುಲ್ಬರ್ಗಾ ಜಿಲ್ಲೆಯು ನೆಲೆಗೊಂಡಿದೆ. ಡೆಕ್ಕನ್ ಇತಿಹಾಸದಲ್ಲಿ ಹಿಂದಿನ ಸುಪ್ರಸಿಧ್ಧ ಸ್ಥಾನವನ್ನು ಬೀದರ್ ಹೊಂದಿತ್ತು. ಆದರೆ ಪ್ರಸ್ತುತದಲ್ಲಿ ಇದು ಶತಮಾನಗಳ ನಿರ್ಲಕ್ಷ್ಯದ ಮತ್ತು ನಾಶವಾದ ಚಿತ್ರಣವನ್ನು ಒದಗಿಸುತ್ತದೆ. ಭೌಗೋಳಿಕವಾಗಿ ಬೀದರ್ ಜಿಲ್ಲೆಯು ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ೧೭.೯° ಉತ್ತರ ಮತ್ತು ೭೭.೫೫° ಪೂರ್ವದಲ್ಲಿದೆ. ಇದು ದಖನ್ ಪ್ರಸ್ಥಭೂಮಿಯ ಒಂದು ಭಾಗ. ಹೆಚ್ಚು ಬೆಟ್ಟಗುಡ್ಡಗಳಿಲ್ಲದೆ ವಿಶಾಲ ಮಟ್ಟಸಪ್ರದೇಶಗಳಿಂದ ಕೂಡಿದೆ. ಸಮುದ್ರಮಟ್ಟದಿಂದ ೬೧೪ ಮೀಟರು ಎತ್ತರದಲ್ಲಿರುವ ಈ ಜಿಲ್ಲೆಯ ಹವೆ ಹಿತಕರವಾಗಿದೆ. ಜಿಲ್ಲೆಯ ವಾರ್ಷಿಕ ಸರಾಸರಿ ಮಳೆ ೯೦೭.೫ ಮಿಮೀ. ಔರಾದ ಹಾಗೂ ಭಾಲ್ಕಿಗಳು ಕಪ್ಪು ಮಣ್ಣಿನ ನೆಲ ಹೊಂದಿವೆ. ಈ ಜಿಲ್ಲೆಯ ಯಾವುದೇ ಭಾಗದಲ್ಲೂ ಖನಿಜ ನಿಕ್ಷೇಪಗಳಿಲ್ಲ. ಮಾಂಜರಾ ನದಿಯು ಈ ಜಿಲ್ಲೆಯ ಪ್ರಮುಖ ನದಿ. ಗೋದಾವರಿ ನದಿಯ ಉಪನದಿಯಾಗಿರುವ ಈ ನದಿ ೯೭ ಕಿಲೋಮೀಟರು ಉದ್ದವಿದ್ದು ಜಿಲ್ಲೆಯ ಮಧ್ಯದಲ್ಲಿ ಪೂರ್ವಾಭಿಮುಖವಾಗಿ ಹರಿದು ಆಂಧ್ರದ ಗಡಿಯನ್ನು ಪ್ರವೇಶಿಸುತ್ತದೆ. ಕಾರಂಜಾ ನದಿಯು ಮತ್ತೊಂದು ಪ್ರಮುಖ ನದಿ. ಇದು ತೆಲಂಗಾಣಾದ ಕೊಹಿರ್ ಪ್ರದೇಶದಲ್ಲಿ ಹುಟ್ಟಿ ಬೀದರ್ ತಾಲುಕಿನಲ್ಲಿ ಹರಿದು, ಭಾಲ್ಕಿಯಲ್ಲಿ ಇದು ಮಾಂಜರಾ ನದಿಯನ್ನು ಸೇರುತ್ತದೆ. ಬಸವಕಲ್ಯಾಣ ತಾಲೂಕಿನಲ್ಲಿ ಹುಟ್ಟುವ ಮುಲ್ಲಾಮಾರಿ ನದಿಯು ಗುಲ್ಬರ್ಗಾವನ್ನು ಪ್ರವೇಶಿಸುತ್ತದೆ. ಚುಳಕಿ, ಗಂಡೋರಿ, ನಗರವಾಲಾ, ಹುಡಗಿ ಹಾಗೂ ಹಳ್ಳಿಖೇಡ ನಾಲಾ ಇವುಗಳು ಸಣ್ಣ ಹೊಳೆಗಳು. ಚರಿತ್ರೆ ಚಾರಿತ್ರಿಕವಾಗಿ, ಬೀದರ್ ಜಿಲ್ಲೆ ಪ್ರಾಮುಖ್ಯತೆಗೆ ಬಂದದ್ದು ಬಸವಣ್ಣನವರ ಕಾಲದಲ್ಲಿ ಮತ್ತು ಬಹಮನಿ ಸುಲ್ತಾನರ ಕಾಲದಲ್ಲಿ. ಈ ಜಿಲ್ಲೆಯ ಕೆಲಭಾಗಗಳಲ್ಲಿ ನವಶಿಲಾಯುಗದ ಕಾಲದ ಅವಶೇಷಗಳು ಸಿಕ್ಕಿವೆ. ರಾಷ್ಟ್ರಕೂಟರು, ದೇವಗಿರಿಯ ಯಾದವರು, ಕಾಕತೀಯರು ಈ ಪ್ರದೇಶವನ್ನಾಳಿದ್ದಾರೆ. ಜಿಲ್ಲೆಯ ಬಸವಕಲ್ಯಾಣವು ಚಾಲುಕ್ಯರ ರಾಜಧಾನಿಯಾಗಿತ್ತು. ಕ್ರಿಸ್ತಶಕ ೧೪೨೪ರಲ್ಲಿ ಬೀದರ್ ಪಟ್ಟಣವು ಬಿಜಾಪುರದ ಬಹಮನಿ ಸುಲ್ತಾನರ ರಾಜಧಾನಿಯಾಗಿ ಬರೀದ್ ಶಾಹಿ ಕಾಲದವರೆಗೆ ಮುಂದುವರಿಯಿತು. ಕ್ರಿಸ್ತಶಕ ೧೬೧೯ರಲ್ಲಿ ಈ ಪ್ರದೇಶ ಅದಿಲ್ ಶಾಹಿಗಳ ವಶವಾಯಿತು. ೧೬೫೬ರಲ್ಲಿ ಔರಂಗಜೇಬನು ಇದನ್ನು ಮೊಘಲ್ ಸಾಮ್ರಾಜ್ಯದ ತೆಕ್ಕೆಗೆ ತೆಗೆದುಕೊಂಡ. ೧೭೨೪ರಲ್ಲಿ ಇದು ನಿಜಾಮರ ವಶಕ್ಕೆ ಬಂತು. ೧೯೪೮ರಲ್ಲಿ ನಿಜಾಮನು ಹೊಸ ಭಾರತದ ಒಕ್ಕೂಟಕ್ಕೆ ಸೇರಿದನು. ೧೯೫೬ರಲ್ಲಿ ರಾಜ್ಯ ಪುನರ್ವಿಂಗಡನೆಯಾದಾಗ ಈಗಿರುವ ತಾಲೂಕುಗಳು ಕರ್ನಾಟಕದಲ್ಲಿ ವಿಲೀನಗೊಂಡವು. ಧರ್ಮ ಬೀದರ ಜಿಲ್ಲೆಯಲ್ಲಿ ಹಿಂದೂ, ಕ್ರೈಸ್ತ, ಮುಸಲ್ಮಾನ, ಜೈನ್ ಮತ್ತು ಸಿಖ್ ಎಂಬ ಐದು ಪ್ರಮುಖ ಧರ್ಮಗಳಿವೆ. ಬೀದರಿನ ಪೂರ್ವದಿಕ್ಕಿನಲ್ಲಿರುವ ದುಲ್ಹನ್ ದರ್ವಾಜದ ಮೂಲಕ ಕೋಟೆಯಿಂದ ಹೊರಬಂದು ಕೆಳಗಿಳಿಯುತ್ತಿದ್ದಂತೆ ಅಗ್ರಹಾರ ಎಂಬ ಹಳ್ಳಿ ಸಿಗುತ್ತದೆ. ಅಲ್ಲಿಂದ ಸ್ವಲ್ಪ ಮುಂದೆ ಸಾಗಿದರೆ ಎಡಬದಿ ದಿಬ್ಬದ ಮೇಲೆ ಒಂದು ಅಷ್ಟಕೋನಾಕೃತಿಯ ಚೌಖಂಡಿ ಎಂಬ ಮುಸ್ಲಿಂ ಕಟ್ಟಡವೊಂದು ಕಾಣುತ್ತದೆ. ಚೌಖಂಡಿ ಎಂದರೆ ನಾಲ್ಕು ಅಂತಸ್ತುಗಳ ಕಟ್ಟಡ. ಆದರೆ ವಾಸ್ತವವಾಗಿ ಇಲ್ಲಿರುವುದು ಎರಡು ಅಂತಸ್ತುಗಳ ಕಟ್ಟಡ. ಈ ಕಟ್ಟಡದಲ್ಲಿ ಬಹಮನಿ ಸುಲ್ತಾನ ಅಹಮದ್ ಶಹಾನ ಆಹ್ವಾನದ ಮೇರೆಗೆ ಇರಾನಿನಿಂದ ಬಂದ ಇಸ್ಲಾಮೀ ಸಂತ ಹಜರತ್ ಖಲೀಲುಲ್ಲಾ ಮತ್ತವರ ಕುಟುಂಬ ವರ್ಗದವರನ್ನ ಸಮಾಧಿಗಳಿವೆ. ದಿಬ್ಬದಿಂದ ಇಳಿದುಬಂದು ಅದೇ ರಸ್ತೆಯಲ್ಲಿ ಅಂದರೆ ಅಷ್ಟೂರು ದಾರಿಯಲ್ಲಿ ಒಂದು ಕಿಲೋಮೀಟರು ಮುಂದೆ ಹೋದರೆ ನಾಲ್ಕೈದು ದರ್ಗಾಗಳ ಸಮೂಹ ಇದೆ. ಇಲ್ಲಿರುವ ಒಂದು ದರ್ಗಾದಲ್ಲಿ ವಜ್ರಗಳಿಂದ ಅಲಂಕರಿಸಲ್ಪಟ್ಟ ಚಿತ್ರಗಳು ಇರುವ ಗೋರಿಯನ್ನು ನೋಡಬಹುದಾಗಿದೆ. ಬೀದರ್ ಪಟ್ಟಣಕ್ಕೆ ಉತ್ತರಭಾಗದಲ್ಲಿರುವ ಮಂಗಳಪೇಟೆಯು ಒಂದು ಕ್ರೈಸ್ತ ಕ್ಷೇತ್ರವಾಗಿದ್ದು ಪ್ರತಿವರ್ಷ ಮೇ ತಿಂಗಳಲ್ಲಿ ಇಲ್ಲಿ ದೊಡ್ಡ ಜಾತ್ರೆ ನೆರೆಯುತ್ತದೆ. ಅದೇರೀತಿ ಭಾಲ್ಕಿಯಲ್ಲಿ ಪ್ರತಿವರ್ಷ ಬಾಲಯೇಸುಜಾತ್ರೆ ನಡೆಯುವುದುಂಟು. ಬೀದರ ಜಿಲ್ಲೆಯ ಔರಾದ, ಸಂತಪುರ, ಹಲಬರ್ಗಾ, ಜಲಸಂಗ್ವಿ, ತಾಳಮರಗಿ, ಹುಲಸೂರ, ಕವಡಿಯಾಳ, ಹುಮನಾಬಾದ ಮುಂತಾದೆಡೆಗಳಲ್ಲೂ ಚರ್ಚುಗಳನ್ನು ಕಾಣಬಹುದು. ನರಸಿಂಹ ಜರನಿ ಕ್ಷೇತ್ರದಲ್ಲಿ ಇರುವ ಗವಿಯಲ್ಲಿ ನಡುಮಟ್ಟದ ನೀರಿನಲ್ಲಿ ಮೂವತ್ತು ಮೀಟರ್ ನಡೆದು ಬಂದರೆ, ನರಸಿಂಹನ ದರ್ಶನ ಪಡೆಯಬಹುದು. ಬೀದರದಿಂದ ಕೆಳಕ್ಕೆ ಕಣಿವೆಯಲ್ಲಿರುವ ಝರಿಯೊಂದು ಹರಿಯುತ್ತಿದ್ದು ನಾನಕ್ ಝರಾ ಎಂಬ ಹೆಸರಿನಲ್ಲಿ ಅದು ಸಿಕ್ಕರಿಗೆ ಪವಿತ್ರ ತೀರ್ಥವೆನಿಸಿದೆ. ಇದು ಸಿಖ್ಖರ ಧರ್ಮಗುರುಗಳಾದ ಗುರುನಾನಕರು ತಮ್ಮ ಆಗಮನದಿಂದ ಪವಿತ್ರಗೊಳಿಸಿದ ಪುಣ್ಯಸ್ಥಳ. ಶ್ರೀ ಮೈಲಾರ್ ಮಲ್ಲಣ್ಣ ದೇವಸ್ಥಾನ : ಬೀದರ್-ಉದ್ಗಿರ್ ರಸ್ತೆಯಲ್ಲಿ ಸುಮಾರು ೧೫ ಕಿ ಮಿ ಬೀದರ್ ನಿಂದ ಶ್ರೀ ಕ್ಷೇತ್ರ ಮೈಲಾರ್ ಅಥವಾ ಖಾನಪುರ್ ಎಂಬ ಚಿಕ್ಕ ಹಳ್ಳಿಯಲ್ಲಿ ಶ್ರೀ ಮೈಲಾರ್ ಮಲ್ಲಣ್ಣ ದೇವಸ್ಥಾನ ಇದೆ. ಈ ದೇವಸ್ಥಾನ ಇಡಿ ಉತ್ತರ ಕರ್ನಾಟಕದಲ್ಲಿ ಪ್ರಸಿದ್ದ ದೇವಸ್ಥಾನ, ಪ್ರತಿ ವರ್ಷ ಲಕ್ಷ ಲಕ್ಷ ಭಕ್ತಾದಿಗಳು ಬಂದು ಮಲ್ಲಣ್ಣ (ಶಿವನ ಉಗ್ರ ರೂಪ) ದರ್ಶನ ಪಡೆಯುತ್ತಾರೆ. ಬೀದರ್ ಜಿಲ್ಲೆಯ ಇನ್ನೊಂದು ಪ್ರಮುಖ ಪಟ್ಟಣ ಹುಮ್ನಾಬಾದ್ ಇಲ್ಲಿರುವ ಮಾಣಿಕಪ್ರಭುಗಳ ಮಠ ಮತ್ತು ೧೭೨೫ರಲ್ಲಿ ನಿರ್ಮಿಸಲಾಗಿರುವ ವೀರಭದ್ರ ದೇವಸ್ಥಾನ ಮತ್ತು ಜಾತ್ರೆಗಳು ಪ್ರಮುಖವಾದುವು. ಬೀದರ್ ಜಿಲ್ಲೆಯ ಬಸವ ಕಲ್ಯಾಣ ಶರಣರ ತಪೋಭೂಮಿಯೆಂದೇ ಪ್ರಸಿದ್ಧವಾಗಿದೆ. ಬಸವಕಲ್ಯಾಣದಲ್ಲಿ ಅರಿವಿನ ಮನೆ, ಅನುಭವ ಮಂಟಪ, ಅಕ್ಕನಾಗಮ್ಮನ ಗವಿ, ಪರುಷಕಟ್ಟೆ, ಮಹಾಮನೆ, ತ್ರಿಪುರಾಂತಕ ಕೆರೆ ಮೊದಲಾಗಿ ಹಲವಾರು ಶರಣರ ಸ್ಥಳಗಳನ್ನು ಮತ್ತು ಸುಸ್ಥಿತಿಯಲ್ಲಿರುವ ಬಸವಕಲ್ಯಾಣ ಕೋಟೆಯನ್ನು ನೋಡಬಹುದಾಗಿದೆ. ಭಾಲ್ಕಿಯಲ್ಲಿ ಹಿರೇಮಠ ಸಂಸ್ಥಾನದ ಮಠ ಇದೆ. ಕಲೆ ಮತ್ತು ಸಾಹಿತ್ಯ ಬಿದರಿಕಲೆ ಪ್ರಪಂಚದಾದ್ಯಂತ ಖ್ಯಾತವಾಗಿರುವ ಬೀದರ್ ಕುಸುರಿ ಕಲೆ. ಈ ಕಲೆಯು ಪರ್ಶಿಯಾ ದೇಶದಿಂದ ಬಹಮನಿ ಸುಲ್ತಾನರ ಕಾಲದಲ್ಲಿ ಇಲ್ಲಿಗೆ ಬಂದು ತದನಂತರ ಹೊಸ ರೂಪವನ್ನು ಪಡೆದುಕೊಂಡಿದೆ. ಕುಶಲ ಕೆಲಸಗಾರರು ತಾಮ್ರ ಮತ್ತು ಸತುವಿನ ಧಾತುಗಳನ್ನು ಮಿಶ್ರಮಾಡಿ ಹೂಜಿ ಮುಂತಾದ ವಸ್ತುಗಳನ್ನು ತಯಾರಿಸಿ ಅವುಗಳ ಮೇಲೆ ಸಣ್ಣದಾಗಿ ಕೊರೆದು ಅದರಲ್ಲಿ ಬೆಳ್ಳಿಯ ತಂತಿಯನ್ನು ಕೂರಿಸಿ ಹೊಳಪು ಕೊಡುತ್ತಾರೆ. ಈ ಬಿದರಿ ಕಲೆಗೆ ವಿದೇಶಗಳಲ್ಲೂ ಬಲು ಬೇಡಿಕೆಯಿದೆ. ಉಲ್ಲೇಖಗಳು
1073
https://kn.wikipedia.org/wiki/%E0%B2%9A%E0%B2%BF%E0%B2%95%E0%B3%8D%E0%B2%95%E0%B2%AE%E0%B2%97%E0%B2%B3%E0%B3%82%E0%B2%B0%E0%B3%81
ಚಿಕ್ಕಮಗಳೂರು
ಚಿಕ್ಕಮಗಳೂರು ಭಾರತ ದೇಶದ, ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಚಿಕ್ಕಮಗಳೂರು ಜಿಲ್ಲೆ ಕಾಫಿನಾಡು ಎಂದು ಸಹ ಕರೆಯಲ್ಪಡುತ್ತದೆ. ಕ್ರಿ.ಶ. ೧೬೭೦ ರಲ್ಲಿ ದೇಶದಲ್ಲಿಯೇ ಮೊಟ್ಟಮೊದಲ ಕಾಫಿಯನ್ನು ದತ್ತಗಿರಿ/ ಚಂದ್ರದ್ರೋಣ ಪರ್ವತ ಭಾಗಗಳಲ್ಲಿ ಬೆಳೆಯಲಾಯಿತು. ಚಿಕ್ಕಮಗಳೂರಿನ ಗಿರಿಶ್ರೇಣಿಗಳು ಪಶ್ಚಿಮ ಘಟ್ಟಗಳ ಒಂದು ಭಾಗವಾಗಿದ್ದು, ತುಂಗಾ ಮತ್ತು ಭದ್ರಾ ನದಿಗಳ ಮೂಲಸ್ಥಾನವಾಗಿದೆ. ಕರ್ನಾಟಕದ ಅತ್ಯಂತ ಎತ್ತರ ಶಿಖರವಾದ ಮುಳ್ಳಯ್ಯನ ಗಿರಿ ಚಿಕ್ಕಮಗಳೂರಿನಲ್ಲಿದೆ. ಈ ಜಿಲ್ಲೆಯು ಮಲೆನಾಡು, ಅರೆಮಲೆನಾಡು, ಹಾಗೂ ಬಯಲುಸೀಮೆಗಳನ್ನೊಳಗೊಂಡಿದೆ, ಈ ಜಿಲ್ಲೆಯ ಹೆಚ್ಚು ಪ್ರದೇಶ ಮಲೆನಾಡು'. ವಿವಿಧ ಜಾತಿಯ ಪ್ರಾಣಿಗಳನ್ನೊಳಗೊಂಡ ಅಭಯಾರಣ್ಯಗಳು, ನಿತ್ಯಹರಿದ್ವರ್ಣಕಾಡುಗಳಿಂದ ಕೂಡಿದ ಪರ್ವತ ಶ್ರೇಣಿಗಳು ಹಾಗೂ ಅನೇಕ ಜಲಪಾತಗಳು ಮತ್ತು ಕಾಫಿ, ಟೀ, ಏಲಕ್ಕಿ, ಮೆಣಸು, ಅಡಿಕೆ,ಬಾಳೆ, ತೆಂಗುಗಳನ್ನು ಬೆಳೆಯುವ ನಾಡಾಗಿದೆ. ಜಲ ಮತ್ತು ಪ್ರಕೃತಿ ಸಂಪತ್ತಿನಿಂದ ಪ್ರಸಿದ್ಧಿ ಪಡೆದಿದೆ. ಚಿಕ್ಕಮಗಳೂರನ್ನು ಪ್ರವಾಸಿಗರ ತಾಣ. ಪ್ರಕುತಿಯ ಸೌಂದರ್ಯವನ್ನು ಒಳಗೊಂಡಿರುವ ಮಲೆನಾಡು ಯೆಂದು ಹೆಸರನ್ನು ಪಡೆದುಕೊಂಡಿದೆ ಉಗಮ ಚಿಕ್ಕಮಗಳೂರು ಜಿಲ್ಲೆಯು ಅದರ ಜಿಲ್ಲಾಕೇಂದ್ರವಾದ ಚಿಕ್ಕಮಗಳೂರು ಪಟ್ಟಣದಿಂದ ತನ್ನ ಹೆಸರನ್ನು ಪಡೆದುಕೊಂಡಿದೆ. ಚಿಕ್ಕಮಗಳೂರು ಎಂದರೆ “ಚಿಕ್ಕ ಮಗಳ ಊರು” ಎಂದರ್ಥ. ಈ ಪಟ್ಟಣವನ್ನು ಪ್ರಸಿದ್ಧ ಸಖರಾಯ ಪಟ್ಟಣ ಮುಖ್ಯಸ್ಥನಾದ ರುಕ್ಮಾಂಗದ, ಚಿಕ್ಕ ಮಗಳಿಗಾಗಿ ವರದಕ್ಷಿಣೆಯಾಗಿ ನೀಡಿದ ಎಂದು ಹೇಳಲಾಗಿದೆ. ಅದ್ದರಿಂದ ಈ ನಗರಕ್ಕೆ ಚಿಕ್ಕಮಗಳೂರು ಎಂಬ ಹೆಸರು ಬಂದಿದೆ. ಹಾಗೆಯೇ “ಹಿರಿಯ ಮಗಳ ಊರು” ಹಿರೇಮಗಳೂರು ಎಂಬ ಊರು ಚಿಕ್ಕಮಗಳೂರಿನಿಂದ ೫ ಕೀ.ಮೀ.ದೂರದಲ್ಲಿದೆ. ಅದಾಗ್ಯೂ ಬಹುತೇಕರು ಚಿಕ್ಕಮಗಳೂರನ್ನು ಚಿಕ್ಕಮಂಗಳೂರು ಎಂದು ತಪ್ಪಾಗಿ ಉಚ್ಚರಿಸುತ್ತಾರೆ. ಚಿಕ್ಕಮಗಳೂರು ಜಿಲ್ಲೆ ೧೯೪೭ ರ ತನಕ ಕಡೂರು ಎಂದು ಕರೆಯಲ್ಪಡುತ್ತಿತ್ತು. ಕೆಲವು ಹಳೆಯ ಶಾಸನಗಳ ಪ್ರಕಾರ ಚಿಕ್ಕಮಗಳೂರು ಮತ್ತು ಹಿರೇಮಗಳೂರುಗಳನ್ನು ಕ್ರಮವಾಗಿ ಕಿರಿಯ ಮುಗುಲಿ ಮತ್ತು ಪಿರಿಯ ಮುಗುಲಿ ಎಂದು ಕರೆಯಲಾಗುತ್ತಿತ್ತು. ಪ್ರಮುಖ ಬೆಳೆ ಚಿಕ್ಕಮಗಳೂರಿನಲ್ಲಿ ಅತಿಹೆಚ್ಚು ಬೆಳೆಯುವ ಬೆಳೆ ಕಾಫಿ. ಇಲ್ಲಿನ ರೈತರು ಕಾಫಿ ಬೆಳೆಯಮೇಲೆ ಅವಲಂಬಿತರಾಗಿದ್ದಾರೆ. ಇಲ್ಲಿ ಅತಿಹೆಚ್ಚು ಮಳೆಯಾಗುತ್ತದೆ.ಕಾಫೀಯ ತವರೂರು ಬಾಬಾಬುಡನ್ ಎ಼಼ಂಬ ಅರೇಬಿಯನ್ ಫಕೀರ್ ಕರ್ನಾಟಕದಲ್ಲಿ ಕಾಫಿಯನ್ನು ಪರಿಚಯಿಸಿದರು. ಎಂಬ ಮೂಢನಂಬಿಕೆ ಚಾಲ್ತಿಯಲ್ಲಿದೆ.ಎಲ್ಲಿಯ ಅರಬ್ ದೇಶ, ಎಲ್ಲಿಯ ಕಾಫಿ‌ ಬೆಳೆ ಇದು ನಿಜಕ್ಕೂ ಹಾಸ್ಯಾಸ್ಪದ ಸಂಗತಿಯಾಗಿದೆ..ಯಾಕೆಂದರೆ‌ ಕಾಫಿ ಒಂದು ಅತ್ಯಂತ ಸೂಕ್ಷ್ಮ ಬೆಳೆ ಇದು ಮರುಭೂಮಿಯಲ್ಲಿ ಬೆಳೆಯಲು ಅದೇನು ಪಾಪಸ್ ಕಳ್ಳಿಯೇ ಅಥವಾ ಖರ್ಜೂರ‌ ಗಿಡವೇ...ನಮ್ಮ ಮಲೆನಾಡಿನಲ್ಲೇ ನೆರಳು ಕಡಿಮೆ ಇದ್ದರೆ ಗಿಡಗಳು ಸುಟ್ಟೇ ಹೋಗುತ್ತವೆ.. ಅಂತಹುದರಲ್ಲಿ 50- 60 ಸೆಂಟಿಗ್ರೇಡ್ ಉಷ್ಣಾಂಶ ಇರೋ ಮೆಕ್ಕಾದಲ್ಲಿ ಕಾಫಿ ಬೆಳೆಯಲು ಸಾಧ್ಯವೇ... ಕಾಫೀ ಬೆಳೆಯನ್ನೂ ಸೆಕ್ಯೂಲರ್ ಮಾಡ ಹೊರಟ ಮೂರ್ಖರ ಹಾಸ್ಯಾಸ್ಪದ ಕಟ್ಟು ಕತೆ ಇದು. ಬೆಳೆಯುವ ಕಾಫಿಯ ತಳಿಗಳೆಂದರೆ ಅರೇಬಿಕ್ ರೋಬಸ್ಟ ಅರೇಬಿಕ್ ತಳಿಯನ್ನು ಇಲ್ಲಿ ಹೆಚ್ಚು ಬೆಳೆಯಲಾಗುತ್ತಿದೆ. ಆದರೆ ಅರೇಬಿಕ್ ಕಾಫಿಯ ಮೂಲ ತಳಿಗಳ ಹೆಸರು ಚಿಕ್ಕಮಗಳೂರು ತಳಿ ಕಾಫಿ ಎಂದೆ ಕರೆಯಲಾಗುತ್ತಿತ್ತು ಇದು ಹೇಗೆ ಬದಲಾವಣೆಯಾಗಿತ್ತು ಎಂದರೆ ಅರೇಬಿಯನ್ ಲೂಟಿಕೋರರು ಚಿಕ್ಕಮಗಳೂರಿನ ಕಾಫಿಯನ್ನು ಆಮದು ಮಾಡಿಕೊಳ್ಳುತ್ತಿದ್ದರು. ಆಗ ಅರೇಬಿಕ್ ದೇಶಗಳಲ್ಲಿ ಇದರ ಬೇಡಿಕೆ ಹೆಚ್ಚಾಯಿತು. ಆಗ ಮೆಕ್ಕಾ ದೇಶದ ಆಮದು ಕೋರರು ಭಾರತಕ್ಕೆ ವಲಸೆ ಬಂದರು. ಆಗ ಚಿಕ್ಕಮಗಳೂರಿಗೆ ಬಂದು. ಅರೇಬಿಕ್ ದೇಶಗಳಿಗೆ ಕೊಡುತ್ತಿದ್ದ ಕಾಫಿ ಬೀಜಗಳನ್ನು ನಮಗೆ ಕೊಡಿ ಎಂದು ಬೇಡಿಕೆಯಿಟ್ಟರು. ಆಗ ಮತ್ತೊಮ್ಮೆ ಬಂದಾಗ ಅರೇಬಿಕ್ ಕಾಫಿ ಕೊಡಿ ಎಂದು ಹೆಸರನ್ನು ಖ್ಯಾತಿಗಳಿಸಿದರು. ಹಾಗಾಗಿ ಚಿಕ್ಕಮಗಳೂರು ಕಾಫಿ ಹೋಗಿ ಅರೇಬಿಕ್ ಹೆಸರು ಬಂದಿದೆ. ಇದರ ಮೂಲ ಹೆಸರು ಚಿಕ್ಕಮಗಳೂರು ಕಾಫಿ ಎಂದೇ ಹೆಸರುವಾಸಿ. ಇತಿಹಾಸ ಹೊಯ್ಸಳರ ಸಾಮ್ರಾಜ್ಯ ಉಗಮವಾದ ಮತ್ತು ಹೊಯ್ಸಳರು ಸಾಮ್ರಾಜ್ಯದ ತಮ್ಮ ಆರಂಭದಲ್ಲಿ ದಿನಗಳನ್ನು ಕಳೆದ ಸೊಸೆಯೂರು ಚಿಕ್ಕಮಗಳೂರು ಜಿಲ್ಲೆಯಲ್ಲಿದೆ. ಸೊಸೆಯೂರು ಕಾಲನಂತರ ಹೊಯ್ಸಳರ ಪ್ರಥಮ ರಾಜಧಾನಿ ಶಶಕಪುರವಾಗಿ ನಿರ್ಮಾಣವಾಯಿತು. ಸೊಸೆಯೂರು ಈಗ ಅಂಗಾಡಿ ಗ್ರಾಮವೆಂದು ಗುರುತಿಸಲ್ಪಡುತ್ತದೆ.ಇದು ಮೂಡಿಗೆರೆ ತಾಲ್ಲೂಕಿನಲ್ಲಿದೆ. ಹಿಂದೊಮ್ಮೆ ದಟ್ಟವಾದ ಗೊಂಡಾರಣ್ಯದಲ್ಲಿ ಜೈನ ಮುನಿಗಳ ಜ್ಞಾನ ತಪಸ್ಸಿಗೆ ಯೋಗ್ಯವಾದ ಸ್ಥಳ ಇದಾಗಿತ್ತೆಂದು, ಚಾಳುಕ್ಯ ನಾಡಿನಿಂದ ಮಲ್ಲಚಂದ್ರದೇವ ಇಲ್ಲಿಗೆ ಬಂದನೆಂಬ ವಿಷಯ ೧೦ನೇ ಶತಮಾನದ ಶಾಸನದಲ್ಲಿ ಉಲ್ಲೇಖಿಸಲಾಗಿದೆ. ಒಂದು ದಂತಕಥೆಯ ಪ್ರಕಾರ, ಒಂದೊಮ್ಮೆ ಈಗಿನ ಅಂಗಡಿ ಗ್ರಾಮದ ವಾಸಂತಿಕಾದೇವಿಯ ಗುಡಿ ಮುಂದೆ ಸುದತ್ತಾಚಾರ್ಯರು ತಮ್ಮ ಶಿಷ್ಯರಿಗೆ ಪಾಠ-ಪ್ರವಚನ ಕಲಿಸುತ್ತಿದ್ದ ಸಂದರ್ಭದಲ್ಲಿ, ಹುಲಿಯೊಂದು ದಿಢೀರನೆ ಗುಡಿಯ ಬಳಿ ಇದ್ದ ಶಿಷ್ಯಾರ್ಥಿಗಳ ಮೇಲೆ ಎರಗಲು ಬಂದಾಗ ಸುದತ್ತಾಚಾರ್ಯರು ಕೂಡಲೇ ಅದನ್ನು ಹೊಡೆಯಲು, ತನ್ನ ಶಿಷ್ಯ ಸಳನಿಗೆ "ಹೊಯ್ ಸಳ" ಎಂದು ಆಜ್ಞಾಪಿಸಿದರು. ಇದೇ ಹೊಯ್ಸಳ ಶಬ್ದದ ಮೂಲ ಎನ್ನುತ್ತಾರೆ. ಕೂಡಲೇ ಸ್ಥಳದಲ್ಲಿದ್ದ ಸಳನು ತನ್ನ ಗುರುಗಳ ಆಜ್ಞೆಯಂತೆ ಹುಲಿಯೊಂದಿಗೆ ವೀರಾವೇಶದಿಂದ ಹೋರಾಡಿ ಹುಲಿಯನ್ನು ಕೊಂದನಂತೆ. ೧೧೧೭ರ ವಿಷ್ಣುವರ್ಧನನ ಶಾಸನದಲ್ಲಿ ಈ ಕಥೆ ಮೊದಲು ಕಾಣಬರುತ್ತದೆ. ಆದರೆ ಇದರ ತಥ್ಯ ಅನುಮಾನಾಸ್ಪದವಾಗಿದ್ದು ಇನ್ನೂ ದಂತಕಥೆಯ ರೂಪದಲ್ಲಿಯೇ ಉಳಿದಿದೆ.ವಿಷ್ಣುವರ್ಧನನು ತಲಕಾಡಿನಲ್ಲಿ ಚೋಳರನ್ನು ಸೋಲಿಸಿದ ಮೇಲೆ ಬಹುಶಃ ಈ ಕಥೆ ಹುಟ್ಟಿರಬಹುದು ಅಥವಾ ಹೆಚ್ಚು ಪ್ರಚಲಿತವಾಗಿರಬಹುದು. ಹೊಯ್ಸಳರ ಲಾಂಛನವು ಸಳನು ಹುಲಿಯನ್ನು ಕೊಲ್ಲುತ್ತಿರುವ ಚಿತ್ರವಾಗಿದ್ದು, ಚೋಳರ ಲಾಂಛನವು ಹುಲಿಯಾಗಿತ್ತು ಎಂಬ ಅಂಶಗಳು ಈ ಊಹೆಗೆ ಕಾರಣ .ಕ್ರಿ.ಶ ೧೦೬೨ ರಲ್ಲಿ ವಿನಯಾದಿತ್ಯ ತನ್ನ ರಾಜಧಾನಿಯನ್ನು ಸೊಸೆಯೂರಿನಿಂದ (ಶಶಕಪುರ-ಅಂಗಡಿ) ಬೇಲೂರಿಗೆ ವರ್ಗಾಯಿಸಿದನಂತೆ. ಅಂಗಡಿ ಗ್ರಾಮದ ಹೊಯ್ಸಳರ ಕಾಲದ ವಾಸಂತಿಕ ದೇವಾಲಯ ಹಾಗೂ ಮಕರ ಜಿನಾಲಯ, ನೇಮೀನಾಥ ಬಸದಿ, ಶಾಂತಿನಾಥ ಬಸದಿ, ವೈಷ್ಣವ ಪಂಥದ ಕೇಶವ ದೇವಾಲಯ, ಶೈವ ಪಂಥದ ಪಾತಾಳ ರುದ್ರೇಶ್ವರ ದೇವಾಲಯ ಹಾಗೂ ಮಲ್ಲೇಶ್ವರ, ಮಲ್ಲಿಕಾರ್ಜುನ ದೇವಾಲಯಗಳು ಈ ಸ್ಥಳದ ಮಹಿಮೆಯನ್ನು ಸಾರುತ್ತವೆ. ತರೀಕೆರೆ ತಾಲ್ಲೂಕಿನ ಅಮೃತಪುರದಲ್ಲಿ ಹೊಯ್ಸಳ ಸಾಮ್ರಾಜ್ಯದ ದೊರೆ ಎರಡನೇ ವೀರ ಬಲ್ಲಾಳ (೧೧೭೩-೧೨೨೦ ಸಿ.ಇ.) ನಿರ್ಮಿಸಿದ ಅಮೃತೇಶ್ವರ ದೇವಸ್ಥಾನವಿದೆ. ಕ್ರಿ.ಶ. ೧೬೭೦ ರಲ್ಲಿ ದೇಶದಲ್ಲಿಯೇ ಮೊಟ್ಟಮೊದಲ ಕಾಫಿಯನ್ನು ಬಾಬಾ ಬುಡನ್‌ಗಿರಿಯಲ್ಲಿ ಬೆಳೆಯಲಾಯಿತು. ಬಾಬಾ ಬುಡನ್ ಅವರು ಮೆಕ್ಕಾ ತೀರ್ಥಯಾತ್ರೆ ಮಾಡುತ್ತಿರುವಾಗ ಯೆಮೆನ್ನ ಮೋಕಾ ಬಂದರಿನಲ್ಲಿ ಕಾಫಿ ಬಗ್ಗೆ ಅವರಿಗೆ ತಿಳಿಯಿತು. ಅವರು ಏಳು ಕಾಫಿಯ ಬೀಜವನ್ನು ಹೊಕ್ಕಳಿನ ಸುತ್ತ ಆಡಗಿಸಿಟ್ಟುಕೊಂಡು ಅರೇಬಿಯಾದಿಂದ ಹೊರಗೆ ತಂದರು. ಅವರು ಮನೆಗೆ ಮರಳುತ್ತಿರುವಾಗ ಬಾಬಾ ಬುಡನಗಿರಿ/ದತ್ತ ಪೀಠ ಬೆಟ್ಟದಲ್ಲಿ ಕೆಲವು ಬೀಜಗಳನ್ನು ನೆಟ್ಟರು ಎಂದು ಹೇಳುತ್ತಾರೆ. ಈ ಜಿಲ್ಲೆಯಲ್ಲಿ ಕೇಂದ್ರ ಕಾಫಿ ಸಂಶೋಧನ ಸಂಸ್ಥೆಯು ಇದ್ದು. ಇದನ್ನು ಹಿಂದೆ ೧೯೨೫ ರಲ್ಲಿ ಲೇ. ಡಾ. ಲೆಸ್ಲಿ. ಸಿ. ಕೊಲ್‌ಮನ್ ನೇತೃತ್ವದಲ್ಲಿ ಆರಂಭವಾದ ಕಾಫಿ ಎಕ್ಸ್‌ಪೆರಿಮೆಂಟಲ್ ಸ್ಟೇಷನ್ ಎಂದು ಕರೆಯಲಾಗಿತ್ತು. ಈ ಸಂಸ್ಥೆ ೧೧೯.೮೬ ಎಕರೆಗಳಷ್ಟು ಪ್ರದೇಶದಲ್ಲಿ ಹರಡಿಕೊಂಡಿದೆ ಮತ್ತು ಸಂಸ್ಥೆಯು ಕಾಫಿ ಗುಣಮಟ್ಟ ಸುಧಾರಿಸಲು ಸಂಶೋಧನೆಯನ್ನು ನಡೆಸುತ್ತದೆ. ಶಾಸನಗಳಲ್ಲಿ  ಚಿಕ್ಕಮಗಳೂರು.           ಚಿಕ್ಕಮಗಳೂರು ಇದ್ದ ಮೇಲೆ ದೊಡ್ಡ ಮಗಳೂರೂ ಇರಬೇಕಲ್ಲ ಎಂಬ ಸಹಜ ಪ್ರಶ್ನೆಗೆ ಪಕ್ಕದಲ್ಲೇ ಇರುವ ‘ಹಿರೇಮಗಳೂರು’ ‘ನಾನಿದ್ದೇನೆ’ ಎನ್ನುತ್ತದೆ. ಇವರಿಬ್ಬರು ಯಾರ ಮಕ್ಕಳು? ಎಂಬ ಪ್ರಶ್ನೆ ಉದಿಸಿದರೆ ಸಖರಾಯಪಟ್ಟಣದ ರುಕ್ಮಾಂಗದ ದೊರೆಯ ಮಕ್ಕಳೆಂದು ಹೇಳುವ ಪುರಾಣ ಕಥೆ ಇದೆ.           ಆದರೆ, ನಮ್ಮ ಶಾಸನಗಳು ಕಟ್ಟಿಕೊಡುವ ಚಿಕ್ಕಮಗಳೂರಿನ ಇತಿಹಾಸ ಬೇರೆಯದೇ ಆಗಿದೆ, ತುಂಬಾ ಕುತೂಹಲಕರವೂ ಆಗಿದೆ. ಚಿಕ್ಕಮಗಳೂರಿನ ಶಾಸನಗಳನ್ನು ಸನ್ಮಾನ್ಯ ಶ್ರೀ ಬಿ.ಎಲ್.ರೈಸ್ ಅವರು ಕ್ರಿ.ಶ. 1900ರ ಸುಮಾರಿನಲ್ಲಿ  ಸಂಗ್ರಹಿಸಿ, ಸಂಕಲಿಸಿ, ಸಂಪಾದಿಸಿ, ಪ್ರಕಟಿಸಿದ್ದಾರೆ. ಈ ಜಾಡನ್ನು ಹಿಡಿದು ನೋಡಿದರೆ, ಆಗಿನ ಚಿಕ್ಕಮಗಳೂರು ಪಟ್ಟಣದ ವ್ಯಾಪ್ತಿಗೆ ಸೇರಿದ್ದ ಪ್ರದೇಶಗಳೆಂದರೆ ಕೋಟೆ, ಬಸವನಹಳ್ಳಿ ಎರಡು ಮಾತ್ರವೇ. ಈಗ ಚಿಕ್ಕಮಗಳೂರಿನ ಹೃದಯಭಾಗವೇ ಆಗಿಹೋಗಿರುವ ಉಪ್ಪಳ್ಳಿ, ದಂಟರಮಕ್ಕಿ, ಹಿರೇಮಗಳೂರು ಮುಂತಾದವೂ ಆಗ ಪ್ರತ್ಯೇಕ ಗ್ರಾಮ ವ್ಯಾಪ್ತಿಯನ್ನೇ ಪಡೆದಿದ್ದುವು! ಅದಕ್ಕೂ ಹಿಂದೆ ಚಿಕ್ಕಮಗಳೂರು ಎಂದರೆ ಈಗಿನ ಕೋಟೆ ಪ್ರದೇಶ ಮಾತ್ರವೇ!        ಈಗ ಚಿಕ್ಕಮಗಳೂರಿನ ಅವಿಭಾಜ್ಯ ಭಾಗವಾಗಿರುವ ಹಿರೇಮಗಳೂರಿನ ಯೂಪ ಸ್ತಂಭದ ಶಾಸನ ಕ್ರಿ.ಶ. 2-3 ನೇ ಶತಮಾನದ್ದು.  ಆ ಕಾಲದಲ್ಲಿ ಶಾತವಾಹನರ ಆಳ್ವಿಕೆಗೆ ಈ ಪ್ರದೇಶ ಸೇರಿದ್ದುದನ್ನು ದಾಖಲಿಸುತ್ತದೆ. ಇಲ್ಲಿನ ‘ಅಶ್ವಯೂಪ’ ಪದದ ಸುಳಿವಿನಿಂದ ಈ ಶಾಸನ ಅಶ್ವಮೇಧಯಾಗಕ್ಕೆ ಸಂಬಂಧಿಸಿದ್ದೆಂಬುದನ್ನೂ ಊಹಿಸಬಹುದು.       ನಂತರ ಗಂಗ, ನೊಳಂಬ, ಆಳುಪ, ಸಾಂತರ, ತರ್ಯಲ್ಲ, ಸೇನವಾರ, ಚೋಳ, ಚಾಳುಕ್ಯ, ಹೊಯ್ಸಳ, ಸೇಉಣ, ವಿಜಯನಗರ, ಬೇಲೂರು ನಾಯಕರು, ಮೈಸೂರು ಒಡೆಯರು ಮುಂತಾದ ರಾಜ ಮನೆತನಗಳ ಆಳ್ವಿಕೆಗೆ ಈ ಪ್ರದೇಶ ಸೇರಿ ಹೋಗಿರುವುದನ್ನು ಇಲ್ಲಿನ ಶಾಸನಗಳು ದೃಢಪಡಿಸುತ್ತವೆ.      ಹಿರೇಮಗಳೂರಿನ ಪರಶುರಾಮ ದೇವಾಲಯದ ಮಾಳಿಗೆಯ  ಕಲ್ಲಿನ ಮೇಲೆ ಕೆತ್ತಿರುವ ಶಾಸನ 8-9 ನೇ ಶತಮಾನಕೆ ಸೇರಿದ್ದು ಗಂಗರ ಕಾಲದ ಆಳ್ವಿಕೆಯಲ್ಲಿ 'ಹಿರಿ ಮುಗುಳಿಯಗ್ರಹಾರ’ ಎಂಬ ಸ್ಪಷ್ಟತೆಯನ್ನು ಊರಿನ ಹೆಸರಿನ ಬಗೆಗೆ ನೀಡುತ್ತದೆ.      ಚಿಕ್ಕಮಗಳೂರು ಕೋಟೆ ಕಲ್ಯಾಣಿಯ ಉತ್ತರಕ್ಕೆ ನೆಟ್ಟಿದ್ದ ಶಾಸನ (ಚಿ.ಮ 3) (ಈಗ ಕಲ್ಯಾಣಿ ಕಣ್ಮರೆ ಆಗಿರುವುದರಿಂದ ಈ ಶಾಸನವನ್ನು ಹುಡುಕಾಡಬೇಕಿದೆ) ನೀತಿಮಾರ್ಗ ಕೊಂಗಣಿವರ್ಮ ಧರ್ಮ ಮಹಾರಾಜಾಧಿರಾಜನ ಕಾಲದಲ್ಲಿ ಕಿರಿಯ ಮುಗಳಿಯ ಪೆಮ್ಮಡಿಗೊಂಡನಿಗೆ ದತ್ತಿ ನೀಡಿದುದನ್ನು ಉಲ್ಲೇಖಿಸುವ ಜೊತೆಗೆ, ಪಿರಿಯ ಮುಗುಳಿಯ ಕೊಮರಯ್ಯ, ಪಲ್ಮಾಡಿಯ ಮೆಂದಮ್ಮ, ಬೆಣ್ಣೆಯೂರಿನ ದೇವಗಣ, ಮಳ್ಳವೂರಿನ ಮೆರ್ಪಾಡಿಗೌಡ, ಉರ್ಪವಳ್ಳಿಯ ಚಾಮಯ್ಯ, ಇನ್ದವೂರಿನ ವಿಟಿಯ್ಯ ಮುಂತಾದವರು ಈ ದತ್ತು ಭೂಮಿಯ ಆಸುಪಾಸಿನಲ್ಲಿದ್ದದನ್ನು ತಿಳಿಸುತ್ತದೆ. ಅನೇಕ ಅಂಶಗಳನ್ನು ತನ್ನೊಳಗೆ ಕಾಪಿಟ್ಟುಕೊಂಡಿರುವ ಈ ಶಾಸನವನ್ನು ಅಧ್ಯಯನ ಮಾಡಿ ಮಾಡಿದಂತೇ ಆ ಕಾಲದ ಸಂಸ್ಕೃತಿ ಪರಂಪರೆಗಳಿಗೆ ತೋರು ಬೆರಳಾಗುತ್ತದೆ.       ಕ್ರಿ.ಶ. 1140ರ (ಚಿ.ಮ- 4) ಶಾಸನವು ಚಿಕ್ಕಮಗಳೂರು, ಕೋಟೆ ಕಂದಕದ ಗೋಡೆಯ ಪಕ್ಕದಲ್ಲಿದ್ದ ವೀರಗಲ್ಲು, ಈ ವೇಳೆಗಾಗಲೇ ಕಿರಿಯ ಮುಗುಳಿಯನ್ನು ‘ಚಿಕ್ಕಮುಗುಳಿ’ ಎಂದು ಕರೆಯುತ್ತಿದ್ದುದನ್ನು ಈ ಶಾಸನ ದಾಖಲಿಸಿದೆ. ಈ ಅವಧಿಯಲ್ಲಿ ಇಲ್ಲಿನ ಮಹಾ ಪ್ರಭು ಚಿಕ್ಕಬಸವಯ್ಯನವರೆಂದೂ ಹೇಳುವ ಈ ಶಾಸನದಲ್ಲಿ ಇವರ ಮಗ ಹೆಮ್ಮಾಡಿಗೌಡ ಮತ್ತು ಮೊಮ್ಮಗ ಮಸಣಿತಂಮ್ಮರ  ಉಲ್ಲೇಖಗಳೂ ದೊರೆಯುತ್ತವೆ.     ಇದೇ ಸ್ಥಳದಲ್ಲಿದ್ದ ಮತ್ತೊಂದು ವೀರಗಲ್ಲು ಕ್ರಿ. ಶ.  1205ರ ಅವಧಿಯಲ್ಲಿ ಕಿರಿಯ ಮುಗುಳಿಯ ಕಟ್ಟಿನ ಕಾಳಗವನ್ನು ಉಲ್ಲೇಖಿಸುತ್ತಾ ಚಿಕ್ಕಮುಗುಳಿ, ಕಿರಿಯ ಮುಗುಳಿ ಹೆಸರುಗಳು ಪರ್ಯಾಯವಾಗಿ ಬಳಕೆಯಲ್ಲಿದ್ದುದನ್ನು ತಿಳಿಸುತ್ತದೆ.    ಅಗ್ರಹಾರ ಬೀದಿಯ ದಿಣ್ಣೆಯ ಮೇಲಿರುವ ಎರಡು ನಿಸದಿಗಲ್ಲುಗಳು ಕ್ರಿ.ಶ. 1101ರ ಅವಧಿಯವು, ಇಲ್ಲಿದ್ದ ಜೈನ ಪ್ರಭಾವವನ್ನು ಸಾರಿ ಹೇಳುತ್ತಿವೆ.      ಚಿಕ್ಕಮಗಳೂರಿನ ಕೋಟೆ ವೀರಭದ್ರ ದೇಗುಲದ ಬಳಿ ಇರುವ ದಾನಶಾಸನವು ಕ್ರಿ.ಶ. 1257ರ ಕಾಲದ್ದು (ಚಿ.ಮ-1).  ಆ ಸಮಯದಲ್ಲಿ  ದ್ವಾರ ಸಮುದ್ರದ ಹೊಯ್ಸಳ ಚಕ್ರವರ್ತಿ ಮೂರನೇ ವೀರನಾರಸಿಂಗ ದೇವನ ಆಳ್ವಿಕೆಯಲ್ಲಿ ದೇವಳಿಗೆ ನಾಡೆಂದು ಹೆಸರಾಗಿದ್ದ ಚಿಕ್ಕಮುಗುಳಿಗೆ ನಾಡಪ್ರಭು ಆಗಿದ್ದವರು ಸೋಮಗೌಡರು. ಇವರ ಮಗ ಮಸಣಗೌಡರು. ಇವರ ಮಗ ಸೋಮಣ್ಣ ಅಥವಾ ಸೋಮಗೌಡ. ಈ ಸೋಮಣ್ಣನ ತಮ್ಮ ಕಲಿಯುಗ ವೀರಭದ್ರ, ಮಹೇಶ್ವರ ಗಣಾವತಾರ, ಶಿವ ಸಮಯವಾರ್ಧಿ ವರ್ಧನ ಸುಧಾಕರ ಎನಿಸಿದ ನಾಳಪ್ರಭು ಬಾಚಯನಾಯಕರು.    ಈ ಬಾಚಯನಾಯಕರ ಶೌರ್ಯ ಸಾಹಸ ವಿನೀತ ಗುಣಗಳನ್ನು ವರ್ಣಿಸುವ ಕಂದ ಪದ್ಯಗಳ ಸೊಗಸು ಇದು! ದೇವಗುರು ಚರಣ ಸರಸಿಜ ಕೇವಲಮೇಂ ಸೈವ ಸಮೇಯ ನಿಸ್ತಾರಚ ತಾಂ| ಭೂ ವಲಯಯದೊಳಗೆ ಬುಧನಿಧಿ ಭಾವಿಸೆ ವೀರನೊಳಗೇಕವೀರಂ ಬಾಚಂ||        ಆಶ್ರಿತ ಜನರಿಗೆ ಕಲ್ಪವೃಕ್ಷದಂತೆ, ಗೋತ್ರಕ್ಕೆಲ್ಲಾ ಶಾಶ್ವತ ಚಿಂತಾಮಣಿಯಂತೆ, ನಿಜವಾಗಲು ಹಸಣಿ ಹನುಮನ ಧ್ವಜದಂತೆ, ವೀರರೊಳಗೇ ಏಕವೀರನೆಂದು ಬಾಚರಸನು ಪ್ರಸಿದ್ಧನಾಗಿದ್ದನಂತೆ. ಶೈವ  ಸಮೇಯ ನಿಸ್ತಾರಕನಾಗಿಯೂ ಹೆಸರುವಾಸಿಯಾಗದ್ದನು. ಇವನು ಚಿಕ್ಕಮಗಳೂರು ಕೋಟೆ ಅಗ್ರಹಾರದ ಈ ಸೋಮನಾಥ ದೇವರನ್ನು ಮತ್ತು ಶ್ರೀ ವೀರಭದ್ರ ದೇವರನ್ನು ಪ್ರತಿಷ್ಠೆ ಮಾಡಿ ಪೂಜೆಯುಪಾರಕ್ಕೆ ದತ್ತಿಯನ್ನೂ ಬಿಟ್ಟಿದ್ದಾನೆ.       ಕ್ರಿ.ಶ. 1280ರ ಮತ್ತೊಂದು ಶಾಸನವು ಲಾಲ್ ಬಾಗಿನಲ್ಲಿ ನೆಟ್ಟಿರುವ ಕಲ್ಲು ಎಂದು ಉಲ್ಲೇಖವಾಗಿದೆ.(ಚಿ.ಮ-2) ಚಿಕ್ಕಮಗಳೂರಿನ ಈ ಲಾಲ್ ಬಾಗ್ ಯಾವುದಿರಬಹುದೆಂಬ ಕುತೂಹಲಕ್ಕೆ ಉತ್ತರವಿನ್ನೂ ಅಸ್ಪಷ್ಟ. ಈ ಶಾಸನದ ಪ್ರಕಾರ ಚಿಕ್ಕಮುಗುಳಿಯ ಮಸಣಗೌಡನ ಹಿರಿಯ ಮಗನಾದ ಸೋಮಗೌಡನು ಅತ್ಯಂತ ಪ್ರಸಿದ್ದ ದೊರೆ. ಈ ಸೋಮಗೌಡನು ಈ ಹಿಂದಿನ  ಶಾಸನ(ಚಿ.ಮ-1) ದಲ್ಲಿ 1257ರಲ್ಲಿ ಕಾಣಿಸಿಕೊಂಡಿರುವವನೇ.  ಮಸಣಗೌಡನ ಮಗನೂ ಬಾಚರಸನ ಹಿರಿಯ ಸಹೋದರನೂ ಆದ ಚಿಕ್ಕಮಗಳೂರು ಆಳಿದ ದೊರೆ.  ಆ ಶಾಸನವು ಬಾಚರಸನನ್ನು ‘ಶೈವ ಸಮೇಯ ನಿಸ್ತಾರಕ’ನೆಂದು ಹೊಗಳಿದರೆ, ಆತನ ಹಿರಿಯಣ್ಣನಾದ, ಶ್ರೀ ಮೂಲಸಂಘದ ದೇಶಿಗಣ ಪುಸ್ತಕ ಗಚ್ಛ ಹನಸೋಗಿಯ ಕೊಂಡಕುಂದಾನ್ವಯದ ಶ್ರೇಯಾಂಸ ಭಟ್ಟಾರಕರ ಗುಡ್ಡ’ ಎನಿಸಿ ಜೈನಧರ್ಮ ಪರಿಪಾಲಕನಾಗಿ ಜನಮಾನಸದಲ್ಲಿ ಸ್ಥಾನ ಪಡೆದಿದ್ದುದನ್ನು ಈ ಶಾಸನ ವರ್ಣಿಸುತ್ತದೆ. ‘ಶ್ರೀ ಮಂನಾಳು ಪ್ರಭು ಸುಚರಿತನೆನೆ ವಿನಯನಿಧಿಯು ನಿರ್ಮಳಚಿತ್ತಂ ಪ್ರೇಮಂ ಬುಧಜನನಿಕರಕ್ಕಾಲ ವಾಸು ನೇಮಂ ಸಕಳ ಜನಕ್ಕಾಧಾರಂ ಧಾರ್ಮಿಷ್ಟವೀರಂ ಧುರಂಧುರಂ ಪುರುಷಾಕಾರಂ ಕಾಮರೂಪಂ ಮಸಣಗಾಉಂಡನಗ್ರತನೂಜಂ ಸೋಮನಾಮಂ ಧರೆಯೋಳ್’ 'ಜಿನ ಸಮಯ ವಾರ್ಧಿ ವರ್ಧನ, ಅನವರತಂ ಚಾತುವರ್ಣಕ್ಕಿತ್ತುಂ ತಣಿಯನು ಘನಮಹಿಮ ಶ್ರೇಯಾಂಸ ಮುನಿಯ ಗುಡ್ಡನು ವಿನಯನಿಧಿ ಛಲದಂಕರಾಮನೆನಿಪಂ ಸೋಮನುಂ||    ಶ್ರೀ ಮನ್ ನಾಡಪ್ರಭು ಸುಚರಿತ, ವಿನಯನಿಧಿ, ನಿರ್ಮಳ ಚಿತ್ತ, ಪ್ರೇಮಮಯಿ, ವಿದ್ಯಾವಂತ ಕಲಾಪೂರ್ಣ ಜನರಿಗೆ ಆಶ್ರಯದಾತ, ಸಕಲ ಜನರಿಗೂ ಆಧಾರ, ಧರ್ಮವೀರ, ಮಹಾನ್ ಸಾಹಸವಂತ, ಪುರುಷಾಕಾರನಾದ ಮನ್ಮಥರೂಪಿ ಸೋಮಗೌಡನು ಜಿನಸಮಯವೆಂಬ ಸಾಗರದಲ್ಲೇ ಸದಾ ಈಜಾಡಿದರೂ ಚತುರ್ವರ್ಣದ ಎಲ್ಲವಕ್ಕೂ, ಎಲ್ಲರಿಗೂ ಸಮಾನವಾಗಿ ದಾನ ನೀಡಿ ತಣಿಸುತ್ತಿದ್ದನು. ಆದರೆ ಅವನಿಗೆ ಎಂದೂ ತಾನು ಕೊಟ್ಟಿರುವುದು ಸಾಕು ಎನಿಸುತ್ತಿರಲಿಲ್ಲ. ಅಂತಹ  ವಿನಯನಿಧಿಯೂ, ಛಲದಂಕರಾಮನೂ ಆಗಿದ್ದ ಮಹಾಮಹಿಮನು ಅಂದಿನ ಚಿಕ್ಕಮುಗುಳಿಯ ನಾಡಪ್ರಭು ಸೋಮಗೌಡನು.    ಈ ಮಹಾಮಹಿಮ ದೊರೆಯು 1280ರ ಜುಲೈ 1 ಅಥವಾ 31 ರಂದು ಪ್ರಾಣ ತ್ಯಜಿಸಿ ಸಮಾಧಿ ಪಡೆದು ಸುರಲೋಕ ಪ್ರಾಪ್ತನಾದಾಗ ಆತನ ಮಗ ಹೆಗ್ಗಡೆಗೌಡನು ಇಲ್ಕಿ ನಿಸದಿಯಕಲ್ಲನ್ನು ಪ್ರತಿಷ್ಠೆ ಮಾಡಿಸಿ ಅಷ್ಟವಿಧಾರ್ಚನೆಗೆ, ಪ್ರಸಾದಕ್ಕೆಂದು ಭೂಮಿಯನ್ನೂ ದತ್ತಿ ನೀಡಿದ್ದಾನೆ. ಈ ನಿಸದಿಕಲ್ಲಿನ ಶಾಸನ ನೀಡುವ ವಿವರಣೆಯಲ್ಲಿ ಆ ಸಮಯದಲ್ಲಿ ಚಿಕ್ಕಮಗಳೂರಿನಲ್ಲಿ ಒಂದು ಬಸದಿ ಇದ್ದಿರಬಹುದೆಂಬ ಊಹೆಗೂ ಅವಕಾಶವಿದೆ. ಜೊತೆಗೆ ಈ ಎರಡೂ ಶಾಸನಗಳು ಸೇರಿ ಒಂದೇ ರಾಜ ಮನೆತನದ ಅಣ್ಣ ತಮ್ಮರು ಜೈನ, ಶೈವ, ಧರ್ಮಗಳ ಆರಾಧಕರಾಗಿದ್ದ ಸಮನ್ವಯತೆಯ ಚಿತ್ರವನ್ನು ಸ್ಪಷ್ಟವಾಗಿ ಕಟ್ಟಿಕೊಡುತ್ತಾ ನಮ್ಮ ಚಿಕ್ಕಮಗಳೂರಿನ ಹಿರಿಯ ಪರಂಪರೆಯ ಸಂಸ್ಕೃತಿಯನ್ನು ದಾಖಲಿಸಿವೆ.     ದಾಖಲೆಗೆ ಸಿಕ್ಕಿರುವ ನಾಲ್ಕಾರು ಶಾಸನಗಳೇ ಸಾವಿರಾರು ವರ್ಷಗಳ ಹಿಂದಿನ ಚಿತ್ರವನ್ನು ಸ್ಪಷ್ಟಗೊಳಿಸುವ ಸಾಮರ್ಥ್ಯ ಪಡೆದಿದ್ದಾವೆ. ಇನ್ನು ಅಂದು ಆಳ್ವಿಕೆ ನಡೆಸಿದ ಒಬ್ಬೊಬ್ಬ ರಾಜನ ಒಂದೊಂದು ಶಾಸನವಾದರೂ ಸಿಕ್ಕುವಂತಿದ್ದರೆ ಮತ್ತದೆಷ್ಟು ಸಮಗ್ರ ಚಿತ್ರಣವನ್ನು ಕಟ್ಟಬಹುದಿತ್ತು ಎಂದು ಮನ ಕಲ್ಪನೆಯ ಲಹರಿಗಳ ತೆಕ್ಕೆಗೆ ಸಿಲುಕಿಕೊಳ್ಳುತ್ತದೆ.     ಹೀಗೇ  ಚಿಕ್ಕಮಗಳೂರು ಕೋಟೆ ಪ್ರದೇಶದಲ್ಲಿ ದಾಖಲಾಗಿರುವ ಎಂಟು ಶಾಸನಗಳು ಕ್ರಿ.ಶ. 899ರಿಂದ ಕ್ರಿ.ಶ.1280 ರವರೆಗೆ ಕೋಟೆಯಲ್ಲಿ ಆಳಿದ ರಾಜರು, ಅನುಸರಿಸುತ್ತಿದ್ದ ಧರ್ಮ, ಕಟ್ಟಿದ  ದೇವಾಲಯಗಳು, ವೀರಪರಂಪರೆಯ ಛಾತಿ ಈ ಮುಂತಾದ ಸುಳಿವುಗಳನ್ನು ನೀಡುತ್ತಾ ಮತ್ತಷ್ಟು ಶಾಸನಗಳನ್ನು ಹುಡುಕಾಡಬೇಕೆಂಬ ಸಂಕಲ್ಪಕ್ಕೆ ಮನವನ್ನು ಗಟ್ಟಿ ಮಾಡುತ್ತವೆ.  ಇದಕ್ಕಾಗಿ ಪ್ರಾಜ್ಞರ ಸಹಕಾರಕ್ಕೆ ಮನತುಡಿಯುತ್ತದೆ.    ಚಿಕ್ಕಮಗಳೂರು ಭಾಗವಾಗಿರುವ ಬಸವನಹಳ್ಳಿ, ಉಪ್ಪಳಿ, ಹಿರೇಮಗಳೂರು, ದಂಟರಮಕ್ಕಿ ಪ್ರದೇಶಗಳ ಶಾಸನಮೌಲ್ಯಗಳ ಅವಲೋಕನ ಮತ್ತಷ್ಟು ಸತ್ವವನ್ನು ತುಂಬಿಕೊಡುವುದನ್ನು ಪರಿಭಾವಿಸಬಹುದು. ಭೌಗೋಳಿಕ ಚಿಕ್ಕಮಗಳೂರು ಕರ್ನಾಟಕದ ಮಧ್ಯಭಾಗದಲ್ಲಿ ಇದೆ, ಇದು ರಾಜ್ಯದ ರಾಜಧಾನಿಯಿಂದ ೨೫೧ ಕಿ.ಮೀ. ದೂರದಲ್ಲಿದೆ. ಚಿಕ್ಕಮಗಳೂರು ೧೨° ೫೪' ೪೨“-೧೩° ೫೩' ೫೩“ ಉತ್ತರ ಅಕ್ಷಾಂಶ ಹಾಗೂ ೭೫° ೦೪' ೪೫“'-೭೬° ೨೧' ೫೦'” ಪೂರ್ವ ರೇಖಾಂಶದಲ್ಲಿದೆ. ಚಿಕ್ಕಮಗಳೂರು ಜಿಲ್ಲೆಯು ಪೂರ್ವದಿಂದ ಪಶ್ಚಿಮಕ್ಕೆ ೧೩೮.೪ ಕಿ.ಮೀ. ಮತ್ತು ಉತ್ತರದಿಂದ ದಕ್ಷಿಣಕ್ಕೆ ೮೮.೫ ಕಿ.ಮೀ. ಉದ್ದವಿದೆ. ಜಿಲ್ಲೆಯಲ್ಲಿ ಸಮಾನ್ಯವಾಗಿ ವರ್ಷಕ್ಕೆ ಸರಾಸರಿ ೧೯೨೫ ಮಿ.ಮೀ. ಮಳೆಯಾಗುತ್ತದೆ. ಜಿಲ್ಲೆಯ ಅತ್ಯಂತ ಎತ್ತರವಾದ ಸ್ಥಳ ಮುಳ್ಳಯ್ಯನ ಗಿರಿ, ಸಮುದ್ರ ಮಟ್ಟಕ್ಕಿಂತ ೧೯೫೫ ಮೀಟರ್ ಎತ್ತರದಲ್ಲಿ ಇದೆ, ಇದು ಕರ್ನಾಟಕದ ಅತ್ಯಂತ ಎತ್ತರವಾದ ಸ್ಥಳ ಕೂಡ. ಜಿಲ್ಲೆಯ ಒಟ್ಟು ವಿಸ್ತೀರ್ಣ ೨೧೦೮.೬೨ ಕಿ.ಮೀ೨ . ಅದರಲ್ಲಿ ಶೇಕಡ ೩೦ರಷ್ಟು ಕಾಡುಗಳಿಂದ ಆವರಿಸಲ್ಪಟ್ಟದೆ. ಚಿಕ್ಕಮಗಳೂರು ಜಿಲ್ಲೆಯ ಪೂರ್ವಕ್ಕೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆ, ದಕ್ಷಿಣಕ್ಕೆ ಹಾಸನ ಜಿಲ್ಲೆ, ಪಶ್ಚಿಮದಲ್ಲಿ ಪಶ್ಚಿಮ ಘಟ್ಟಗಳು ಚಿಕ್ಕಮಗಳೂರನ್ನು ದಕ್ಷಿಣ ಕನ್ನಡ ಮತ್ತು ಉಡುಪಿಯಿಂದ ಬೇರ್ಪಡಿಸುತ್ತವೆ ಮತ್ತು ಉತ್ತರದಲ್ಲಿ ಶಿವಮೊಗ್ಗ ಮತ್ತು ದಾವಣಗೆರೆ ಜೊತೆಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಹವಾಮಾನ ಚಿಕ್ಕಮಗಳೂರು ಭಾರತದ ಎತಿ ದೊಡ್ಡ ಪ್ರದೇಶವಾಗಿದೆ. ಕರ್ನಾಟಕದ ಎತ್ತರದ ತುದಿಯು ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಬೆಟ್ಟವಾಗಿದೆ.(ಎತ್ತರ ೧೯೨೯ ಮೀ. ೬೩೨೯ ಅಡಿಗಳು ) ಕರ್ನಾಟಕದಲ್ಲಿವೆ. ಇದು ನೋಡಲು ಸುಂದರವಾಗಿದ್ದು . ಹಲವಾರು ಕಡೆಗಳಿಂದ ಬರುತ್ತಾರೆ. ಇಲ್ಲಿ ಎತ್ತರವಾದ ಗಿರಿಗಳನ್ನು ಹೊಂದಿದ್ದೆ. ಇಲ್ಲಿ ಅದಿಕ ಮಳೆಯ ಪ್ರಮಣ ಹೆಚ್ಚಾಗಿದೆ. ಅತಿಯಾಗಿ ಮಳೆ ಆಗುವುದರಿಂದ ಇಲ್ಲಿನ ಗಿಡ ಮರಗಳು ಅಚ್ಚ ಹಸಿರಿನಿಂದ ಕೂಡಿದೆ. ( ದತ್ತಾತ್ರೇಯ ಪೀಠ ) ಚಿಕ್ಕಮಗಳೂರಿಗೆ ಬರುವ ಪ್ರಯಾಣಿಕರು ಇಲ್ಲಿರುವ ಹೆಸರುವಾಸಿಯಾದ ದತ್ತಾತ್ರೇಯ ಪೀಠ ಎಂದೂ ಕರೆಯಲ್ಪಡುವ ಚಂದ್ರದ್ರೋಣ ಶ್ರೇಣಿಯನ್ನು  ಭೇಟಿ ಮಾಡಬೇಕು. ಇದು 1895 ಮೀಟರ್ ಎತ್ತರದಲ್ಲಿದೆ. ಚಿಕ್ಕಮಗಳೂರು ಪಟ್ಟಣದಿಂದ 28 ಕಿಮೀ ದೂರದಲ್ಲಿದೆ. ಹಿಂದೂಗಳಿಗೆ ಒಂದು ತೀರ್ಥಯಾತ್ರಾ ಸ್ಥಳವಾಗಿದೆ. ಈ ಕಾರಣದಿಂದಾಗಿ, ಸ್ಥಳವನ್ನು  ಹಿಂದೂ ದೇವರು ಗುರು ದತ್ತಾತ್ರೇಯ ಗುರುತಿಸಲಾಗುತ್ತದೆ. ಚಂದ್ರದ್ರೋಣ ಪರ್ವತದಲ್ಲಿ ಪ್ರವಾಸಿಗರು ಮೂರು ಸಿದ್ಧರಿಂದ ಪವಿತ್ರವಾಗಿರುವವೆಂದು ನಂಬಲಾದ ಮೂರು ಗುಹೆಗಳನ್ನು ನೋಡಬಹುದು .  ಶೀಥಲ -ಮಲ್ಲಿಕಾರ್ಜುನನ ಗುಡಿ ಮತ್ತು ಮಠಗಳೆರಡನ್ನೂ  ಒಳಗೊಂಡಿರುವ ಶೀಥಲ ದೇವಾಲಯ ಹತ್ತಿರದಲ್ಲೇ ಇರುವ ಮತ್ತೊಂದು ಪ್ರಸಿದ್ಧ ಆಕರ್ಷಣೆಯಾಗಿದೆ ಅನುಕೂಲವಾದರೆ ಪ್ರಯಾಣಿಕರು ಈ ಸ್ಥಳದಿಂದ ಕೇವಲ 1 ಕಿಮೀ ದೂರವಿರುವ ಮಾಣಿಕ್ಯಧಾರಾ ಜಲಪಾತವನ್ನು ನೋಡಬಹುದು. ಚಂದ್ರದ್ರೋಣ ಪರ್ವತ ಹೈಕಿಂಗ್ ಮತ್ತು ಚಾರಣಗಳ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳುವ ಆಸಕ್ತಿ ಹೊಂದಿರುವ ಪ್ರವಾಸಿಗರಿಗೆ ಪರಿಪೂರ್ಣವಾದ ಜಾಗ. ಈ ಪ್ರದೇಶದ ವ್ಯಾಪ್ತಿಯ ಎರಡು ಜನಪ್ರಿಯ ಪರ್ವತಗಳೆಂದರೆ ಮುಳ್ಳಯ್ಯನಗಿರಿ (1930 ಮೀಟರ್ ಎತ್ತರದಲ್ಲಿ ಜೊತೆ ಸೈಟ್ ಶಿಖರ) ಮತ್ತು ದತ್ತಗಿರಿ. ಅದೃಷ್ಟವಿದ್ದರೆ  ಜನರು 'ಕುರುಂಜಿ' ವೀಕ್ಷಿಸಲು ಅವಕಾಶ ಪಡೆಯುವರು. ಇದು ಒಂದು ಪರ್ವತದ ಹೂವಾಗಿದ್ದು ಪ್ರತಿ 12 ವರ್ಷಗಳಲ್ಲಿ ಒಮ್ಮೆ ಮಾತ್ರ  ಅರಳುತ್ತದೆ. ಈ ಪ್ರದೇಶ ಹಕ್ಕಿಗಳ ವೀಕ್ಷಣೆ ಕೈಗೊಳ್ಳಲು ಬಯಸುವ ಜನರಿಗೆ ಅತ್ಯುತ್ತಮ ಆಯ್ಕೆಯಾಗಿದೆ. ಜನಸಂಖ್ಯೆ ೨೦೧೧ ರ ಜನಗಣತಿಯ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯ ಜನಸಂಖ್ಯೆ ೧೧,೩೭,೯೬೧ ಸರಿಸುಮಾರಾಗಿ ಸೈಪ್ರಸ್ ರಾಷ್ಟ್ರಕ್ಕೆ ಸಮನಾಗಿದೆ ಅಥವಾ ಸಂಯುಕ್ತ ಅಮೆರಿಕದ ರೋಡ್ ಐಲೆಂಡ್ ರಾಜ್ಯಕ್ಕೆ ಸಮನಾಗಿದೆ. ಚಿಕ್ಕಮಗಳೂರು ಜನಸಂಖ್ಯೆಯಲ್ಲಿ ಭಾರತದಲ್ಲಿ ೪೦೮ನೇ ಸ್ಥಾನದಲ್ಲಿದೆ (ಒಟ್ಟು ೬೪೦ರಲ್ಲಿ). ಜಿಲ್ಲೆಯ ಪ್ರತಿ ಚದರ ಕಿಲೋ ಮೀಟರ್ ಗೆ(೪೧೦/ಚದರ ಮೈಲಿ) ೧೫೮.೧೯ ನಿವಾಸಿಗಳ ಸಾಂದ್ರತೆಯನ್ನು ಹೊಂದಿದೆ. ಇಲ್ಲಿನ ಜನಸಂಖ್ಯಾ ಬೆಳವಣಿಗೆ ದರವು ೨೦೦೧-೨೦೧೧ ದಶಕದಲ್ಲಿ ಶೇಕಡ ೦.೨೮ ಆಗಿತ್ತು. ಚಿಕ್ಕಮಗಳೂರು ಪ್ರತಿ ೧೦೦೦ ಪುರುಷರಿಗೆ ೧೦೦೮ ಸ್ತ್ರೀ ಯ ಲಿಂಗ ಅನುಪಾತವನ್ನು ಹೊಂದಿದೆ ಮತ್ತು ಶೇಕಡ ೭೯.೨೪ ಸಾಕ್ಷರತಾ ದರವನ್ನು ಹೊಂದಿದೆ. ಒಟ್ಟು ಜನಸಂಖ್ಯೆಯ ಶೇಕಡ ೮೧ ಜನರು ಗ್ರಾಮೀಣ ಪ್ರದೇಶದಲ್ಲಿ ಮತ್ತು ಶೇಕಡ ೧೯ ಜನರು ನಗರದಲ್ಲಿ ವಾಸಿಸುತ್ತಾರೆ. ಶೃಂಗೇರಿ ತಾಲ್ಲೂಕು ಅತಿ ಕಡಿಮೆ ಜನಸಂಖ್ಯೆಯನ್ನು ಮತ್ತು ಚಿಕ್ಕಮಗಳೂರು ತಾಲ್ಲೂಕು ಅತಿ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ.ಬಹುತೇಕರು ಕನ್ನಡ ಭಾಷೆ ಮಾತನಾಡುತ್ತಾರೆ. ಜತೆಗೆ ತುಳು ,ಕೊಂಕಣಿ , ಬ್ಯಾರಿ ಭಾಷೆ ಮಾತನಾಡುವವರನ್ನೂ ಜಿಲ್ಲೆಯಲ್ಲಿ ಕಾಣಬಹುದಾಗಿದೆ. ಆಡಳಿತ ಚಿಕ್ಕಮಗಳೂರು ಜಿಲ್ಲೆಯೂ ಕರ್ನಾಟಕದ ಮೈಸೂರು ವಿಭಾಗಕ್ಕೆ ಸೇರುತ್ತದೆ. ಇದನ್ನು ಎರಡು ಉಪ ವಿಭಾಗಗಳಾಗಿ ಮಾಡಲಾಗಿದೆ. ಚಿಕ್ಕಮಗಳೂರು ಉಪ ವಿಭಾಗ ಮತ್ತು ತರೀಕೆರೆ ಉಪ ವಿಭಾಗ. ತರೀಕೆರೆ ಉಪ ವಿಭಾಗ, ತರೀಕೆರೆ ಕಡೂರು ಮತ್ತು ನರಸಿಂಹರಾಜಪುರ ತಾಲ್ಲೂಕುಗಳನ್ನು ಒಳಗೊಂಡಿದೆ ಮತ್ತು ಚಿಕ್ಕಮಗಳೂರು ಉಪ ವಿಭಾಗ ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ ಮತ್ತು ಶೃಂಗೇರಿ ತಾಲ್ಲೂಕುಗಳನ್ನು ಒಳಗೊಂಡಿದೆ. ಜಿಲ್ಲಾಧಿಕಾರಿ ( ಜಿಲ್ಲಾ ಮ್ಯಾಜಿಸ್ಟ್ರೇಟ್ ಸಹ) ಜಿಲ್ಲೆಯ ಕಾರ್ಯಾತ್ಮಕ ಮುಖ್ಯಸ್ಥರಾಗಿರುತ್ತಾರೆ. ಪ್ರತಿ ಉಪ ವಿಭಾಗವು ಸಹಾಯಕ ಆಯುಕ್ತರನ್ನುಹೊಂದಿದೆ ಮತ್ತು ಪ್ರತಿ ತಾಲ್ಲೂಕು ಒಬ್ಬ ತಹಸೀಲ್ದಾರರನ್ನು ಹೊಂದಿದೆ. ಇವರು ಜಿಲ್ಲಾಧಿಕಾರಿ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡುತ್ತಾರೆ. ಆರ್ಥಿಕತೆ ಕೃಷಿಯು ಚಿಕ್ಕಮಗಳೂರಿನ ಜಿಲ್ಲೆಯ ಆರ್ಥಿಕತೆಯ ಬೆನ್ನೆಲುಬು ಮತ್ತು ಕಾಫಿ ಬೆಳೆಯು ಕೃಷಿಯ ಮುಖ್ಯ ಭಾಗವಾಗಿದೆ. ಜಿಲ್ಲೆಯ ಕೃಷಿ ಉತ್ಪಾದನೆಯು ಮೂರು ಋತುಗಳಲ್ಲಿ ಹರಡಿಗೊಂಡಿದೆ. ಅವುಗಳೆಂದರೆ ಮುಂಗಾರು, ಹಿಂಗಾರು ಮತ್ತು ಬೇಸಿಗೆ. ಇಲ್ಲಿನ ಪ್ರಮುಖ ಬೆಳೆಗಳು ಏಕದಳ ಧಾನ್ಯಗಳಾದ ಅಕ್ಕಿ, ರಾಗಿ , ಜೋಳ , ಮೆಕ್ಕೆಜೋಳ ಮತ್ತು ಚಿಕ್ಕ ಕಾಳುಗಳು, ದ್ವಿದಳ ಧಾನ್ಯಗಳಾದ, ತೊಗರಿ, ಹುರುಳಿಕಾಳು, ಹೆಸರು ಕಾಳು, ಅವರೆಕಾಯಿ (ಹಯಸಿಂತ್ ಬೀನ್ಸ್) ಮತ್ತು ಕಡಲೆ ಕಾಳು ಮತ್ತು ಕಡಲೆ. ತೈಲ ಬೀಜಗಳಾದ ಶೇಂಗಾ, ಎಳ್ಳು,, ಸೂರ್ಯಕಾಂತಿ ಮತ್ತು ಕ್ಯಾಸ್ಟರ್ ಮತ್ತು ವಾಣಿಜ್ಯ ಬೆಳೆಗಳಾದ ಕಬ್ಬು, ಹತ್ತಿ, ಮತ್ತು ತಂಬಾಕು ಇಲ್ಲಿ ಬೆಳೆಯಲಾಗುತ್ತದೆ. ಚಿಕ್ಕಮಗಳೂರು ಪಟ್ಟಣದಲ್ಲಿ ಸರ್ಕಾರದ ಅಧೀನದಲ್ಲಿರುವ ಕಾಫಿ ಬೋರ್ಡ್, ಜಿಲ್ಲೆಯ ಕಾಫಿ ಉತ್ಪಾದನೆ ಮತ್ತು ಮಾರಾಟದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುತ್ತದೆ. ಚಿಕ್ಕಮಗಳೂರಿನಲ್ಲಿ ಕಾಫಿಯನ್ನು ಸುಮಾರು ೮೫.೪೬೫ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಅದರಲ್ಲಿ ಪ್ರಧಾನವಾಗಿ ಅರೇಬಿಕಾ ಎಂಬ ತಳಿಯನ್ನು ಬೆಟ್ಟೆದ ಮೇಲ್ಭಾಗದಲ್ಲಿ ಮತ್ತು ರೊಬಸ್ಟಾ ಎಂಬ ತಳಿಯನ್ನು ಬೆಟ್ಟೆದ ತಳ ಭಾಗದಲ್ಲಿ ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಜಿಲ್ಲೆಯಲ್ಲಿ ಸುಮಾರು ೧೫೦೦೦ ಕಾಫಿ ಬೆಳೆಗಾರರಿದ್ದು, ಅದರಲ್ಲಿ ಶೇಕಡ ೯೬ ಬೆಳೆಗಾರರು ೪ ಚದರ ಹೆಕ್ಟೇರ್ ಅಥವ ಅದಕ್ಕಿಂತಲು ಕಡಿಮೆ ಪ್ರಮಾಣದ ಉಳುಮೆ ಪ್ರದೇಶವನ್ನು ಹೊಂದಿರುವ ಸಣ್ಣ ಬೆಳೆಗಾರರಾಗಿದ್ದಾರೆ. ಜಿಲ್ಲೆಯ ಸರಾಸರಿ ಕಾಫಿ ಉತ್ಪಾದನೆ ಅರೇಬಿಕಾ ೫೫,೦೦೦:೩೫,೦೦೦ ಮೆಟ್ರಿಕ್ ಟನ್ ಮತ್ತು ರೊಬಸ್ಟಾ ೨೦,೦೦೦ ಮೆಟ್ರಿಕ್ ಟನ್ ಆಗಿದೆ. ಹೆಕ್ಟೇರಿಗೆ ಸರಾಸರಿ ಉತ್ಪಾದಕತೆ ಅರೇಬಿಕಾ ೮೧೦ ಕೆ.ಜಿ. ಮತ್ತು ರೊಬಸ್ಟಾ ಆಫ್ ೧೧೧೦ ಕೆ.ಜಿ. ಆಗಿದೆ, ಇದು ನಮ್ಮ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು. ಕೈಗಾರಿಕೆಗಳು ಚಿಕ್ಕಮಗಳೂರು ಜಿಲ್ಲೆ ಕೈಗಾರಿಕೆಯಲ್ಲಿ ಹೆಚ್ಚು ಅಭಿವೃಧ್ಧಿ ಹೊಂದಿಲ್ಲ, ಮೂಲಭೂತ ಸೌಲಭ್ಯಗಳು ಕೊರತೆ, ಕಳಪೆ ರಸ್ತೆಗಳು, ಕಳಪೆ ರೈಲು ಸಂಪರ್ಕಜಾಲ ಮತ್ತು ಕೈಗಾರಿಕೆಗಳಿಗೆ ವಿರೋದ, ಜಿಲ್ಲೆಯ ಕೈಗಾರಿಕಾ ಅಭಿವೃಧ್ಧಿ ಕುಂಟಿತಕ್ಕೆ ಕಾರಣಗಳು ಜಿಲ್ಲೆಯಲ್ಲಿ ಕೇವಲ ಒಂದು ಭಾರಿ ಕೈಗಾರಿಕಾ ಉದ್ಯಮವಿದೆ. ಅದೆ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ, ಇದು ಮೂಡಿಗೆರೆ ತಾಲೂಕಿನ ಕುದುರೆಮುಖ ಪ್ರದೇಶದಲ್ಲಿ ಇದೆ. ಕೆ.ಐ.ಒ.ಸಿ.ಎಲ್ ೧೯೭೬ ರಲ್ಲಿ ಕುದುರೆಮುಖ ಗಣಿ ಅಭಿವೃದ್ಧಿಪಡಿಸಲು ಮತ್ತು ವರ್ಷಕ್ಕೆ ಸಾರೀಕೃತ ೭.೫ ಮಿಲಿಯನ್ ಟನ್ ಉತ್ಪಾದಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಘಟಕವನ್ನು ೧೯೮೦ರಲ್ಲಿ ಕಾರ್ಯಾರಂಭ ಮಾಡಲಾಯಿತು ಮತ್ತು ಸಾರೀಕೃತ ಉತ್ಪನ್ನದ ಮೊದಲ ಸಾಗಣೆಗೆ ಅಕ್ಟೋಬರ್ ೧೯೮೧ ರಲ್ಲಿ ಮಾಡಲಾಯಿತು, ಉನ್ನದ ಗುಣಮಟ್ಟದ ಬ್ಲಾಸ್ಟ್ ಫರ್ನೇಸ್ ಮತ್ತು ನೇರ ಕಡಿಮೆಗೊಳಿಸುವ ಗ್ರೇಡ್ ಅದಿರು ಉಂಡೆಗಳ ಉತ್ಪಾದನೆಗೆ ಮೂರು ಮಿಲಿಯನ್ ಟನ್ ಸಾಮರ್ಥ್ಯದ ಅದಿರು ಉಂಡೆಗಳ ಘಟಕವನ್ನು ೧೯೮೭ರಲ್ಲಿ ಸ್ಥಾಪಿಸಲಾಯಿತು. ಕೆ.ಐ.ಒ.ಸಿ.ಎಲ್ ನ ಗಣಿಗಾರಿಕೆ ಪರವಾನಗಿ ಅವಧಿ ಮುಗಿದ ಮೇಲೆ ಅದರ ಕಾರ್ಯಾಚರಣೆಗಳನ್ನು ಸುಪ್ರೀಂ ಕೋರ್ಟ್ ೩೧ ಡಿಸೇಂಬರ್ ೨೦೦೫ ರಿಂದ ನಿಲ್ಲಿಸಿತ್ತು, ಇದರಿಂದ ಕೆ.ಐ.ಒ.ಸಿ.ಎಲ್ ಭಾರಿ ಹಿನ್ನಡೆ ಉಂಟಾಯಿತು. ಇದರಿಂದ ಅನೇಕ ನೌಕರರು ತಮ್ಮ ಉದ್ಯೋಗಗಳನ್ನು ಕಳೆದುಕೊಂಡರು, ಈ ಪ್ರದೇಶದಲ್ಲಿ ಸಮಾಜಿಕ ಹಿಂಬಡಿತ ಆಗಬಾರದೆಂಬ ಕಾರಣಕ್ಕೆ , ಈ ಕಾರ್ಮಿಕರಿಗೆ ಬೇರೆ ಪ್ರದೇಶಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸವ ಪ್ರಯತ್ನ ಮಾಡಲಾಯಿತು. ಜಿಲ್ಲೆಯಲ್ಲಿ ಕೇವಲ ಒಂದೆ ಒಂದು ಮಧ್ಯಮ ಕೈಗಾರಿಕಾ ಉದ್ಯಮವಿದ್ದು ಇದು ತರೀಕೆರೆ ಪಟ್ಟಣದಲ್ಲಿ ಇದೆ. ತರೀಕೆರೆಯಲ್ಲಿರುವ ಬಿಇಎಂಎಲ್ ಅಂಗಸಂಸ್ಥೆಯಾದ ವಿಜ್ಞಾನ್ ಇಂಡಸ್ಟ್ರೀಸ್ ಲಿಮಿಟೆಡ್ ಉಕ್ಕಿನ ಅಚ್ಚುಗಳಲ್ಲಿ ಉತ್ಪಾದಿಸುತ್ತದೆ. ಜಿಲ್ಲೆಯಲ್ಲಿ ಎರಡು ಕೈಗಾರಿಕಾ ಪ್ರದೇಶಗಳಿವೆ, ಒಂದು ಚಿಕ್ಕಮಗಳೂರು ನಗರದ ಹತ್ತಿರವಿದೆ, ಇನ್ನೊಂದು ಕಡೂರು ತಾಲ್ಲೂಕಿನ ಬೀರೂರು ನಗರದ ಬಳಿಯಿದೆ. ಚಿಕ್ಕಮಗಳೂರು ನಗರದ ಬಳಿಯಿರುವ ಕೈಗಾರಿಕಾ ಪ್ರದೇಶ ೧೩.೨೦ ಎಕರೆಯಲ್ಲಿ (೫೩.೪೦೦ ಮೀ.೨) ಮತ್ತು ಬೀರೂರು ಹತ್ತಿರವಿರುವ ಕೈಗಾರಿಕಾ ಪ್ರದೇಶ ೧೧.೧ ಎಕರೆಯಲ್ಲಿ (೪೫೦೦ ಮೀ೨) ಹರಡಿಕೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ಚಿಕ್ಕಮಗಳೂರು ತಾಲ್ಲೂಕಿನ ಅಬ್ಳೆ ಹಳ್ಳಿಯ ಬಳಿ ೧೪೫ ಎಕರೆ (೦.೫೯ ಕಿ. ಮೀ೨) ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸುತ್ತಿದೆ. ಶಿಕ್ಷಣ ೨೦೧೧ರ ಜನಗಣತಿಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಶೇಕಡಾವಾರು ಸಾಕ್ಷರತೆಯು ಶೇಕಡ ೭೯.೨೫ ರಷ್ಟು ಆಗಿದೆ, ಇದರಲ್ಲಿ ಶೇಕಡ ೮೪.೪೧ಪುರಷರು ಮತ್ತು ಶೇಕಡ ೭೩.೧೬ ಮಹಿಳೆಯರು ಅಕ್ಷರಸ್ಥರಾಗಿದ್ದಾರೆ. ಚಿಕ್ಕಮಗಳೂರು ಸಾಕ್ಷರತೆ ಪ್ರಮಾಣ ಕರ್ನಾಟಕ ರಾಜ್ಯದ ಸರಾಸರಿ ಸಾಕ್ಷರತಾ ಪ್ರಮಾಣ ಶೇಕಡ ೭೫.೩೬ ಕ್ಕಿಂತ ಹೆಚ್ಚಾಗಿದೆ. ಶೃಂಗೇರಿ ತಾಲ್ಲೂಕು ಶೇಕಡ ೯೨.೬೮ ರೊಂದಿಗೆ ಅತಿ ಹೆಚ್ಚು ಸಾಕ್ಷರತೆ ಪ್ರಮಾಣವನ್ನು ಹೊಂದಿರು ತಾಲ್ಲೂಕು ಆಗಿದೆ ಮತ್ತು ಕಡೂರು ತಾಲ್ಲೂಕು ಶೇಕಡ ೭೪.೩೩ ರೊಂದಿಗೆ ಕನಿಷ್ಟ ಸಾಕ್ಷರತೆಯನ್ನು ಹೊಂದಿದರು ತಾಲ್ಲೂಕು ಆಗಿದೆ. ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ೨೦೦೧ರಂತೆ, ಚಿಕ್ಕಮಗಳೂರು ಜಿಲ್ಲೆಯು ೧೬೨೦ ಪ್ರಾಥಮಿಕ ಶಾಲೆಗಳನ್ನು(೧೫೧೯೨೩ ವಿದ್ಯಾರ್ಥಿಗಳೊಂದಿಗೆ) ಮತ್ತು ೨೩೫ ಮಾಧ್ಯಮಿಕ ಶಾಲೆಗಳನ್ನು(೩೪೬೦೭ ವಿದ್ಯಾರ್ಥಿಗಳೊಂದಿಗೆ) ಹೊಂದಿದೆ. ಚಿಕ್ಕಮಗಳೂರು ತಾಲ್ಲೂಕು ೪೧೪ ಪ್ರಾಥಮಿಕ ಶಾಲೆಗಳೊಂದಿಗೆ(೪೨೭೭೪ ವಿದ್ಯಾರ್ಥಿಗಳೊಂದಿಗೆ) ಅತಿ ಹೆಚ್ಚು ಪ್ರಾಥಮಿಕ ಶಾಲೆಗಳನ್ನು ಹೊಂದಿರುವ ತಾಲ್ಲೂಕು ಆಗಿದೆ ಮತ್ತು ಶೃಂಗೇರಿ ೮೦ ಪ್ರಾಥಮಿಕ ಶಾಲೆಗಳೊಂದಿಗೆ (೫೮೨೨ ವಿದ್ಯಾರ್ಥಿಗಳೊಂದಿಗೆ) ಅತಿ ಕಡಿಮೆ ಪ್ರಾಥಮಿಕ ಶಾಲೆಗಳನ್ನು ಹೊಂದಿರುವ ತಾಲ್ಲೂಕು ಆಗಿದೆ. ಕಡೂರು ೭೪ ಮಾಧ್ಯಮಿಕ ಶಾಲೆಗಳೊಂದಿಗೆ(೯೯೯೦ ವಿದ್ಯಾರ್ಥಿಗಳೊಂದಿಗೆ) ಅತಿ ಹೆಚ್ಚು ಮಾಧ್ಯಮಿಕ ಶಾಲೆಗಳನ್ನು ಹೊಂದಿರುವ ತಾಲ್ಲೂಕು ಆಗಿದೆ ಮತ್ತು ಶೃಂಗೇರಿ ೯ ಮಾಧ್ಯಮಿಕ ಶಾಲೆಗಳೊಂದಿಗೆ(೧೪೯೨ ವಿದ್ಯಾರ್ಥಿಗಳೊಂದಿಗೆ) ಅತಿ ಕಡಿಮೆ ಮಾಧ್ಯಮಿಕ ಶಾಲೆಗಳನ್ನು ಹೊಂದಿರುವ ತಾಲ್ಲೂಕು ಆಗಿದೆ. ಪ್ರೌಢ ಶಿಕ್ಷಣ ೨೦೦೧ ರಂತೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ೪೬ ಪ್ರೌಢ ಶಾಲೆಗಳು (೪೭೧೧ ವಿದ್ಯಾರ್ಥಿಗಳೊಂದಿಗೆ) ವಿದ್ಯಾರ್ಥಿಗಳಿಗೆ ಪ್ರೌಢ ಶಿಕ್ಷಿಣವನ್ನು ನೀಡುತ್ತೀವೆ. ಕಡೂರು ತಾಲ್ಲೂಕು ೧೨ ಪ್ರೌಢ ಶಾಲೆಗಳೊಂದಿಗೆ (೧೩೨೪ ವಿದ್ಯಾರ್ಥಿಗಳೊಂದಿಗೆ) ಅತಿ ಹೆಚ್ಚು ಪ್ರೌಢ ಶಾಲೆಗಳನ್ನು ಹೊಂದಿರುವ ತಾಲ್ಲೂಕು ಆಗಿದೆ ಮತ್ತು ಶೃಂಗೇರಿ ೨ ಪ್ರೌಢ ಶಾಲೆಗಳೊಂದಿಗೆ(೧೬೦ ವಿದ್ಯಾರ್ಥಿಗಳೊಂದಿಗೆ) ಅತಿ ಕಡಿಮೆ ಪ್ರೌಢ ಶಾಲೆಗಳನ್ನು ಹೊಂದಿರುವ ತಾಲ್ಲೂಕು ಆಗಿದೆ ಪದವಿ ಶಿಕ್ಷಣ ೨೦೦೧ ರಂತೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ೧೩ ಪದವಿ ಕಾಲೇಜುಗಳು (೪೬೧೫ ವಿದ್ಯಾರ್ಥಿಗಳೊಂದಿಗೆ) ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಿಣವನ್ನು ನೀಡುತ್ತೀವೆ. ಈ ಕಾಲೇಜುಗಳು ಕುವೆಂಪು ವಿಶ್ವವಿದ್ಯಾಲಯದಿಂದ ಮಾನ್ಯತೆಯನ್ನು ಪಡೆದಿವೆ. ಚಿಕ್ಕಮಗಳೂರು ತಾಲ್ಲೂಕು ೪ ಪದವಿ ಕಾಲೇಜುಗಳೊಂದಿಗೆ (೧೬೪೮ ವಿದ್ಯಾರ್ಥಿಗಳೊಂದಿಗೆ) ಅತಿ ಹೆಚ್ಚು ಪದವಿ ಕಾಲೇಜುಗಳನ್ನು ಹೊಂದಿರುವ ತಾಲ್ಲೂಕು ಆಗಿದೆ. ಕಡೂರು ತಾಲ್ಲೂಕು ೨ ಮತ್ತು ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ ಮತ್ತು ಶೃಂಗೇರಿ ತಾಲ್ಲೂಕುಗಳು ತಲ ೧ ಪದವಿ ಕಾಲೇಜುಗಳನ್ನು ಹೊಂದಿವೆ. ತಾಂತ್ರಿಕ ಶಿಕ್ಷಣ ಇಂಜಿನಿಯರಿಂಗ್: ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ ಚಿಕ್ಕಮಗಳೂರು ಪಟ್ಟಣದಲ್ಲಿ ಇದೆ. ಇಲ್ಲಿ ಯಾಂತ್ರಿಕ (ಮೆಕ್ಯಾನಿಕಲ್), ಗಣಕ ಯಂತ್ರ ವಿಜ್ಞಾನ (ಕಂಪ್ಯೂಟರ್ ಸೈನ್ಸ್ ), ಎಲೆಕ್ಟ್ರಾನಿಕ್ಸ್ ಮತ್ತು ಸಂಪರ್ಕ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್), ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕಾ ಉತ್ಪಾದನೆಯ, ಪರಿಸರ (ಎನ್ವಿರಾನ್ಮೆಂಟಲ್ ) ಮತ್ತು ಸಿವಿಲ್ ವಿಭಾಗಗಳು ಇವೆ. ಈ ಕಾಲೇಜು ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಪಡೆದಿದೆ. ಪಾಲಿಟೆಕ್ನಿಕ್‍ಗಳು: ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ಕೆಳಗಿನ ಪಾಲಿಟೆಕ್ನಿಕ್‌ಗಳು ಡಿಪ್ಲೊಮಾ ಶಿಕ್ಷಣವನ್ನು ನೀಡುತ್ತೀವೆ. ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ ಪಾಲಿಟೆಕ್ನಿಕ್, ಚಿಕ್ಕಮಗಳೂರು: ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಮತ್ತು ಗಣಕ ಯಂತ್ರ ವಿಜ್ಞಾನ (ಕಂಪ್ಯೂಟರ್ ಸೈನ್ಸ್ ), ವಿಭಾಗದಲ್ಲಿ ಡಿಪ್ಲೊಮಾ ಶಿಕ್ಷಣವನ್ನು ನೀಡುತ್ತೀವೆ. ಡಿ ಎ ಸಿ ಜಿ, ಚಿಕ್ಕಮಗಳೂರು: ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್, ಆಟೋಮೊಬೈಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಶಿಕ್ಷಣವನ್ನು ನೀಡುತ್ತೀವೆ. ಎಸ್ ಜೆ ಎಮ್ ಎಮ್ ವಿದ್ಯಾಪೀಠ ಪಾಲಿಟೆಕ್ನಿಕ್, ಬೀರೂರು: ಸಿವಿಲ್ ಎಂಜಿನಿಯರಿಂಗ್ ಮತ್ತು ದೂರಸಂಪರ್ಕ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಶಿಕ್ಷಣವನ್ನು ನೀಡುತ್ತೀವೆ. ಕೈಗಾರಿಕಾ ತರಬೇತಿ ಸಂಸ್ಥೆಗಳು: ಚಿಕ್ಕಮಗಳೂರಿ ಜಿಲ್ಲೆಯಲ್ಲಿ ಒಟ್ಟು ೭ ಔದ್ಯಮಿಕ ತರಬೇತಿ ಸಂಸ್ಥೆಗಳು ಇವೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಚಿಕ್ಕಮಗಳೂರು ತಾಲ್ಲೂಕ್. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕಡೂರು ತಾಲ್ಲೂಕ್. ಎಸ್. ಡಿ. ಎಮ್. ಕೈಗಾರಿಕಾ ತರಬೇತಿ ಸಂಸ್ಥೆ, ಸಮ್ಸೇ, ಮೂಡಿಗೆರೆ ತಾಲ್ಲೂಕ್. ಎಸ್. ಜೆ. ಎಮ್. ಕೈಗಾರಿಕಾ ತರಬೇತಿ ಸಂಸ್ಥೆ, ಬಾಳೆಹೊನ್ನೂರು, ನರಸಿಂಹರಾಜಪುರ ತಾಲ್ಲೂಕ್. ಎಸ್. ಜೆ. ಎಮ್. ಕೈಗಾರಿಕಾ ತರಬೇತಿ ಸಂಸ್ಥೆ, ಬೀರೂರು, ಕಡೂರು ತಾಲ್ಲೂಕ್. ಕರ್ನಾಟಕ ಕೈಗಾರಿಕಾ ತರಬೇತಿ ಸಂಸ್ಥೆ, ಚಿಕ್ಕಮಗಳೂರು ತಾಲ್ಲೂಕ್. ಲಕ್ಷ್ಮೀಶಾ ಕೈಗಾರಿಕಾ ತರಬೇತಿ ಸಂಸ್ಥೆ, ದೇವನೂರು, ಕಡೂರು ತಾಲೂಕಿನ. ಮಾರುತಿ ಕೈಗಾರಿಕಾ ತರಬೇತಿ ಸಂಸ್ಥೆ, ಕಡೂರು ತಾಲ್ಲೂಕ್. ಎಸ್. ಜೆ. ಎಮ್. ಪದವಿ ಕಾಲೇಜು, ತರೀಕೆರೆ ತಾಲ್ಲೂಕ್. ವೈದ್ಯಕೀಯ ಶಿಕ್ಷಣ ಹೊಸ ವೈದ್ಯಕೀಯ ಕಾಲೇಜು ಚಿಕ್ಕಮಗಳೂರು ನಗರಕ್ಕೆ ಮಂಜೂರು ಮಾಡಿಲಾಗಿದೆ ಆದರೆ ನಿರ್ಮಾಣ ಕಾರ್ಯ ಇನ್ನೂ ಪ್ರಾರಂಭಿಸಿಲ್ಲ. ಚಿಕ್ಕಮಗಳೂರು ಜಿಲ್ಲೆಯ ವೈದ್ಯಕೀಯ ಶಿಕ್ಷಣದ ಮೂಲ ಕೊಪ್ಪದ ಅರೋರ್ ಲಕ್ಷ್ಮಿನಾರಾಯಣ ರಾವ್ ಸ್ಮಾರಕ ಆಯುರ್ವೇದ ವೈದ್ಯಕೀಯ ಕಾಲೇಜು. ಈ ಕಾಲೇಜು ಆಯುರ್ವೇದಿಕ್ ಮೆಡಿಸಿನ್ ಅಂಡ್ ಸರ್ಜರಿ (ಬಿ ಏ ಎಮ್ ಎಸ್) ಪದವಿ ನೀಡುತ್ತದೆ. ಸಾರಿಗೆ ರಸ್ತೆ ಚಿಕ್ಕಮಗಳೂರು ಜಿಲ್ಲೆಯ ರಸ್ತೆಗಳು ಸರಿಯಾಗಿ ನಿರ್ವಹಿಸಲ್ಪಡುವ ರಸ್ತೆಗಳ ಪಟ್ಟಿಯಲ್ಲಿ ಬರುವುದಿಲ್ಲ. ದುಸ್ಥಿತಿಯಲ್ಲಿ ಇರುವ ರಸ್ತೆಗಳು ಸ್ವಲ್ಪ ಮಟ್ಟಿಗೆ ಜಿಲ್ಲೆಯ ಅಭಿವೃದ್ಧಿಗ ಅಡ್ಡಿಯಾಗಿವೆ. ಜಿಲ್ಲೆಯು ಉತ್ತಮವಾದ ರೈಲು ಸಂರ್ಪಕ ಜಾಲವನ್ನು ಹೊಂದಿಲ್ಲ. ಜಿಲ್ಲೆಯು ಒಟ್ಟು ೭೨೬೪ ಕೀ. ಮೀ ರಸ್ತೆಯನ್ನು ಹೊಂದಿದೆ. ಜಿಲ್ಲೆಯ ಮೇಲೆ ಕೇವಲ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತದೆ. ರಾಷ್ಟೀಯ ಹೆದ್ದಾರಿ ಎನ್.ಎಚ್.-೧೩(ಶೋಲಾಪೌರದಿಂದ ಮಂಗಳೂರಿಗೆ) ಕೊಪ್ಪ ಮತ್ತು ಶೃಂಗೇರಿ ಮೂಲಕ ಹಾದು ಹೋಗುತ್ತದೆ ಮತ್ತು ರಾಷ್ಟೀಯ ಹೆದ್ದಾರಿ ಎನ್.ಎಚ್.-೨೦೬(ಬೆಂಗಳೂರಿಂದ ಹೋನ್ನವರಗೆ) ಕಡೂರು.ತರೀಕೆರೆ ಮೂಲಕ ಹಾದು ಹೋಗುತ್ತದೆ. ಜಿಲ್ಲೆಯಲ್ಲಿ ಈಗಿರುವ ರಾಜ್ಯ ಹೆದ್ದಾರಿಗಳಾದ ತರೀಕೆರೆ-ಬೇಲೂರು, ಶೃಂಗೇರಿ-ಹಾಸನ್ ಮತ್ತು ಕಡೂರು-ಮಂಗಳೂರು ಹೆದ್ದಾರಿಗಳನ್ನು ನವೀಕರಿಸುವ ಪ್ರಸ್ತಾಪವಿದೆ. ರೈಲು ಚಿಕ್ಕಮಗಳೂರು, ಕಡೂರು ಮತ್ತು ತರೀಕೆರೆ ತಾಲ್ಲುಕುಗಳು ರೈಲ್ವೆ ಮಾರ್ಗಗಳನ್ನು ಹೊಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಲಕ ಒಟ್ಟು ೧೩೬ ಕೀ.ಮೀ ರೈಲ್ವೆ ಮಾರ್ಗ ಹಾದು ಹೋಗುತ್ತದೆ. ಬೀರೂರು ಜಿಲ್ಲೆಯ ಅತಿದೊಡ್ಡ ಜಂಕ್ಷನ್ ಆಗಿದೆ. ಹೊಸ ರೈಲು ಮಾರ್ಗ ಚಿಕ್ಕಮಗಳೂರನ್ನು ಹುಬ್ಬಳ್ಳಿ-ಬೆಂಗಳೂರು ಟ್ರಂಕ್ ಮಾರ್ಗಕ್ಕೆ ಸೇರಿಸುತ್ತದೆ, ಚಿಕ್ಕಮಗಳೂರನ್ನು ಬೆಂಗಳೂರು-ಮಂಗಳೂರು ಟ್ರಂಕ್ ಮಾರ್ಗಕ್ಕೆ ಸೇರಿಸುವ ಹೊಸ ಮಾರ್ಗದ ಕಾರ್ಯ ಆರಂಭವಾಗಿದೆ. ವಿಮಾನ ಚಿಕ್ಕಮಗಳೂರಿನಿಂದ ೧೦ ಕೀ.ಮೀ ದೂರದಲ್ಲಿ ಇರುವ ಗೌಡನಹಳ್ಳಿಯಲ್ಲಿ ಸಣ್ಣ ವಿಮಾನ ನಿಲ್ದಾಣ ಇದೆ. ಇದು ಸಣ್ಣ ಗಾತ್ರದ ವಿಮಾನಗಳ ಉಡವಣೆಯ ಸಮಾರ್ಥ್ಯವನ್ನು ಹೊಂದಿದೆ. ಮಂಗಳೂರು , ಹುಬ್ಬಳ್ಳಿ ಮತ್ತು ಬೆಂಗಳೂರು, ಚಿಕ್ಕಮಗಳೂರಿಗೆ ಹತ್ತಿರದ ವಿಮಾನ ನಿಲ್ದಾಣಗಳು. ಪ್ರವಾಸಿ ತಾಣಗಳು ಚಿಕ್ಕಮಗಳೂರಿನಲ್ಲಿ ಭೇಟಿ ನೀಡುವ ಸ್ಥಳಗಳು ಮುಳ್ಳಯ್ಯನಗಿರಿ, ಹೆಬ್ಬೆ ಜಲಪಾತ, ದತ್ತಪೀಠ, ಕೆಮ್ಮಣ್ಗುಂಡಿ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಕಲ್ಹತ್ತಿ ಜಲಪಾತ, ಭದ್ರಾ ವನ್ಯಜೀವಿ ಧಾಮ ಮತ್ತು ಪ್ರವಾಸಿಗರು ನೋಡಬಹುದಾದ ಹೆಚ್ಚಿನ ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ವ್ಯಾಪಕವಾದ ಪಶ್ಚಿಮ ಘಟ್ಟಗಳಲ್ಲಿ ವಿಸ್ತಾರವಾದ ಸ್ಥಳವು ದಟ್ಟವಾದ ಶೋಲಾ ಕಾಡುಗಳ ಮನೋಹರವಾದ ನೋಟಗಳನ್ನು ಮತ್ತು ದಟ್ಟವಾದ ಹಸಿರು ಪೊದೆಗಳನ್ನು ದಾರಿಗಳಲ್ಲಿ ನೀಡುತ್ತದೆ. ಅತ್ಯುನ್ನತ ಎತ್ತರದಲ್ಲಿ ನೆಲೆಗೊಂಡಿರುವ ಬಹು ಬೆಟ್ಟಗಳು ಅದ್ಭುತ ವಾತಾವರಣದ ವಿಹಂಗಮ ನೋಟವನ್ನು ಆನಂದಿಸಲು ಅವಕಾಶವನ್ನು ನೀಡುತ್ತವೆ. ಈ ಪಟ್ಟಿಯನ್ನು ಪರಿಶೀಲಿಸಿ ಮತ್ತು ಬೆಂಗಳೂರಿನಿಂದ ವಾರಾಂತ್ಯದ ಹೊರಹೋಗುವ ಪ್ರವಾಸವನ್ನು ಯೋಜಿಸಲು ನಿಮ್ಮ ನೆಚ್ಚಿನ ಸ್ಥಳಗಳಿಗೆ ಭೇಟಿ ನೀಡಲು ಚಿಕ್ಮಗಳೂರು ಪ್ರವಾಸೋದ್ಯಮ ಸ್ಥಳಗಳು ತಮ್ಮ ಸಾಹಸ ಸ್ವರೂಪ ಮತ್ತು ಬಹು ಸಾಹಸ ಚಟುವಟಿಕೆಗಳಿಗೆ ಸ್ಥಳಾವಕಾಶದ ಕಾರಣದಿಂದಾಗಿ ಪ್ರಪಂಚದಾದ್ಯಂತದ ಏಕವ್ಯಕ್ತಿ ಮತ್ತು ಗುಂಪು ಪ್ರಯಾಣಿಕರ ಪೈಕಿ ಪ್ರಸಿದ್ಧವಾಗಿದೆ. ಬಿಂಡಿಗ ದೀಪೋತ್ಸವ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗ ದೇವಿರಮ್ಮ ದೀಪೋತ್ಸವ ದೀಪಾವಳಿಯಂದು ನಡೆಯುವ ವಿಶೇಷ ಚಂದ್ರದ್ರೋಣ ಪರ್ವತ ಶ್ರೇಣಿಗೆ ಹೊಂದಿಕೊಂಡಿರುವ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ದೀಪಾವಳಿ ದಿನದಂದು ನಡೆಯುವ ಉತ್ಸವ, ಸಂಪ್ರದಾಯ, ದೀಪ ಹಚ್ಚುವುದು ಕಾಪಿsಯ ತವರಿನ ವಿಶೇಷಗಳಲ್ಲಿ ಒಂದು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡ ಭಾಗದಲ್ಲಿ ಅನೇಕ, ಆಚರಣೆ, ಸಂಪ್ರದಾಯ, ನಂಬಿಕೆಗಳು ಇವೆ. ಇದರಲ್ಲಿ ಒಂದು ಮಲ್ಲೇನಹಳ್ಳಿ ಸಮೀಪದಲ್ಲಿ ಇರುವ ದೇವಿರಮ್ಮ ಬೆಟ್ಟದಲ್ಲಿ ದೀಪಾವಳಿಯಂದು ನಡೆಯುವ ವಿಶೇಷ ಪೂಜೆ. ವರ್ಷಪೂರ್ತಿ ತಣ್ಣಗೆ ಇರುವ ಈ ಬೆಟ್ಟವನ್ನು ಏರಲು ಮಧ್ಯರಾತ್ರಿಯಿಂದಲೇ ಭಕ್ತರು ಹಾತೊರೆಯುತ್ತಾರೆ. ಕಡಿದಾದ ಅಂಕು ಡೊಂಕಿನ ಹಾದಿಯಲ್ಲಿ ಅಬಾಲವೃದ್ಧರಾಗಿ ಸಾಲು-ಸಾಲಾಗಿ ಜನ ಬೆಟ್ಟ ಹತ್ತುವುದೇ ಒಂದು ರೋಮಂಚನ ಅನುಭವ. ಮಳೆ, ಛಳಿ, ಗಾಳಿಯನ್ನು ಲೆಕ್ಕಿಸದೆ ಜನ ಬೆಟ್ಟವೇರಿ, ದೇವಿಯ ದರ್ಶನ ಪಡೆದು ಧನ್ಯರಾಗುತ್ತಾರೆ. ಬೆಟ್ಟದ ಕೆಳಭಾಗದಲ್ಲಿ ದೇವಿರಮ್ಮ ದೇವಾಲಯ ಇದ್ದು ಪ್ರತಿ ದೀಪಾವಳಿ ದಿನದಂದು ಉತ್ಸವ ಮೂರ್ತಿಯನ್ನು ಬೆಟ್ಟಕ್ಕೆ ತಂದು ಇಡುತ್ತಾರೆ. ಇಲ್ಲಿಗೆ ಆಗಮಿಸುವ ಭಕ್ತರು ದೇವಿ ಪೂಜೆಯಲ್ಲಿ ಭಾಗವಹಿಸಿ ಕೆಳಕ್ಕೆ ಇಳಿಯುತ್ತಾರೆ. ಬೆಟ್ಟ ಏರಿದಷ್ಟೇ ಇಳಿಯುವುದೂ ಸಾಹಸದ ಕೆಲಸ. ದಣಿವು, ಆಯಸವನ್ನು ಲೆಕ್ಕಿಸದೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಇಂದು ಭೇಟಿ ನೀಡಿ ತೆರಳುತ್ತಾರೆ. ಈ ದೃಶ್ಯ ಇರುವೆಗಳು ಸಾಲಾಗಿ ಹರಿದು ಹೋಗುತ್ತಿರುವಂತೆ ಭಾಸವಾಗುತ್ತದೆ. ಜಿಲ್ಲಾ ಕೇಂದ್ರದಿಂದ ವಿಶೇಷ ಬಸ್ಸಿನ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಬೆಳಗ್ಗೆ ಪೂಜೆ ಬಳಿಕ ರಾತ್ರಿ ದೀಪವನ್ನು ಹಚ್ಚುತ್ತಾರೆ. ಇಲ್ಲಿನ ದೀಪ ನೋಡಿ ಮನೆ ಮನೆಗಳಲ್ಲಿ ದೀಪ ಬೆಳಗುವುದು ಅನೂಚಾನವಾಗಿ ನಡೆದು ಬಂದ ಪದ್ಧತಿ. ಮೈಸೂರು ಅರಸರೂ ಇದನ್ನು ಪಾಲಿಸುತ್ತಾರೆ ಎನ್ನಲಾಗುತ್ತದೆ. ಇದಾದ ೨ ದಿನಗಳಲ್ಲಿ ದೇವಿರಮ್ಮ ದೇವಾಲಯದಲ್ಲಿ ಉತ್ಸವ ಜರುಗಿ ತನ್ನಿಂದ ತಾನೇ ಬಾಗಿಲು ತೆರೆದುಕೊಳ್ಳುತ್ತದೆ ಎನ್ನುವ ನಂಬಿಕೆಯೂ ಪ್ರಚಲಿತವಾಗಿದೆ. ಕೊನೆಯ ದಿನ ಕೆಂಡಾರ್ಚನೆ ನಡೆಯುವ ಮೂಲಕ ದೇವಿರಮ್ಮ ವಾರ್ಷಿಕ ಉತ್ಸವಕ್ಕೆ ತೆರೆ ಬೀಳುತ್ತದೆ. ಕರ್ತಿಕೆರೆ ಗ್ರಾಮವು ಚಿಕ್ಕಮಗಳೂರು ಜಿಲ್ಲೆಯಲ್ಲಿದೆ.ಚಿಕ್ಕಮಗಳೂರಿನಿಂದ ೪ ಕಿ, ಮೀ, ದೂರದಲ್ಲಿದೆ ಕರ್ತಿಕೆರೆ. ಈ ಗ್ರಾಮದಲ್ಲಿ ಅತ್ಯಂತ ವಿಜ್ರುಂಭಣೆಯಿಂದ ಶ್ರೀ ರಂಗನಾಥಸ್ವಾಮಿ ಮತ್ತು ದುರ್ಗಮ್ಮ ನವರ ಜಾತ್ರಾ ಮಹೋತ್ಸವ ನೆಡೆಯುತ್ತದೆ ಈ ಜಾತ್ರೆಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.ಆಗಮಿಸಿ ದೇವರ ದರ್ಶನ ಪಡೆದು ಧನ್ಯರಾಗುತ್ತಾರೆ. ಈ ಜಾತ್ರೆಯಲ್ಲಿ ಭಕ್ತಾದಿಗಳು ದೇವರಿಗೆ ಹರಕೆಯನ್ನು ಸಲ್ಲಿಸಿ ದೇವರ ಕೃಪೇಗೆ ಪಾತ್ರರಾಗುತ್ತಾರೆ. ಈ ಜಾತ್ರೆಯು ಪ್ರಸ್ಸಿದ್ದವಾದ ಒಂದು ಜಾತ್ರೆಯಾಗಿದೆ. ಈ ಜಾತ್ರೆಯಲ್ಲಿ ಬೆಳ್ಳಿಯ ರಥೋತ್ಸವ ನೆಡೆಯುತ್ತದೆ ಬೆಳ್ಳಿಯ ರಥದಲ್ಲಿ ರಂಗನಾಥ ಸ್ವಾಮಿಯನ್ನು ಕೂರಿಸಿ ರಥವನ್ನು ಎಳೆಯುತ್ತಾರೆ.ಸಂಜೆ ಈ ಜಾತ್ರೆ ಪ್ರಯುಕ್ತ ಶನಿ ದೇವರ ನಾಟಕ ಕಾರ್ಯಕ್ರಮ ನೆಡೆಯುತ್ತದೆ. ಪ್ರವಾಸಿ ತಾಣ ಚಿಕ್ಕಮಗಳೂರಿನಲ್ಲಿ ಭೇಟಿ ನೀಡುವ ಸ್ಥಳಗಳು ಮುಳ್ಳಯ್ಯನಗಿರಿ, ಹೆಬ್ಬೆ ಜಲಪಾತ, ಬಾಬಾ ಬುಡನ್ಗರಿ, ಕೆಮ್ಮಣ್ಗುಂಡಿ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಕಲ್ಹತ್ತಿ ಜಲಪಾತ, ಭದ್ರಾ ವನ್ಯಜೀವಿ ಧಾಮ ಮತ್ತು ಪ್ರವಾಸಿಗರು ನೋಡಬಹುದಾದ ಹೆಚ್ಚಿನ ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ವ್ಯಾಪಕವಾದ ಪಶ್ಚಿಮ ಘಟ್ಟಗಳಲ್ಲಿ ವಿಸ್ತಾರವಾದ ಸ್ಥಳವು ದಟ್ಟವಾದ ಶೋಲಾ ಕಾಡುಗಳ ಮನೋಹರವಾದ ನೋಟಗಳನ್ನು ಮತ್ತು ದಟ್ಟವಾದ ಹಸಿರು ಪೊದೆಗಳನ್ನು ದಾರಿಗಳಲ್ಲಿ ನೀಡುತ್ತದೆ.ಅತ್ಯುನ್ನತ ಎತ್ತರದಲ್ಲಿ ನೆಲೆಗೊಂಡಿರುವ ಬಹು ಬೆಟ್ಟಗಳು ಅದ್ಭುತ ವಾತಾವರಣದ ವಿಹಂಗಮ ನೋಟವನ್ನು ಆನಂದಿಸಲು ಅವಕಾಶವನ್ನು ನೀಡುತ್ತವೆ. ಈ ಪಟ್ಟಿಯನ್ನು ಪರಿಶೀಲಿಸಿ ಮತ್ತು ಬೆಂಗಳೂರಿನಿಂದ ವಾರಾಂತ್ಯದಲ್ಲಿ ಹೊರಹೋಗುವ ಪ್ರವಾಸವನ್ನು ಯೋಜಿಸಲು ನಿಮ್ಮ ನೆಚ್ಚಿನ ಸ್ಥಳಗಳಿಗೆ ಭೇಟಿ ನೀಡಲುು ಚಿಕ್ಕಮಗಳೂರು ಪ್ರವಾಸೋದ್ಯಮ ಸ್ಥಳಗಳು ತಮ್ಮ ಸಾಹಸ ಸ್ವರೂಪ ಮತ್ತು ಬಹು ಸಾಹಸ ಚಟುವಟಿಕೆಗಳಿಗೆ ಸ್ಥಳಾವಕಾಶದ ಕಾರಣದಿಂದಾಗಿ ಪ್ರಪಂಚದಾದ್ಯಂತದ ಏಕವ್ಯಕ್ತಿ ಮತ್ತು ಗುಂಪು ಪ್ರಯಾಣಿಕರ ಪೈಕಿ ಪ್ರಸಿದ್ಧವಾಗಿದೆ. ಗಿರಿಧಾಮಗಳು ಕೆಮ್ಮಣ್ಣುಗುಂಡಿ: ಕೆಮ್ಮಣ್ಣುಗುಂಡಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಬಳಿ ಇರುವ ಒಂದು ಗಿರಿಧಾಮ. ಇದು ಬಾಬಾ ಬುಡನ್‌/ಚಂದ್ರದ್ರೋಣ ಶ್ರೇಣಿಯಲ್ಲಿ ಬರುವ ಸುಂದರ ಗಿರಿಧಾಮ. ಕೃಷ್ಣರಾಜ ಒಡೆಯರು ಇದನ್ನು ತಮ್ಮ ಮೆಚ್ಚಿನ ಬೇಸಿಗೆ ಶಿಬಿರ ಮಾಡಿಕೊಂಡಿದ್ದರಿಂದ, ಇದನ್ನು ಕೆ.ಅರ್. ಗಿರಿಧಾಮ ಎಂದು ಸಹ ಕರಿಯುತ್ತಾರೆ. ಕೆಮ್ಮಣ್ಣಗುಂಡಿ ಸಮುದ್ರ ಮಟ್ಟದಿಂದ ೧೪೩೪ ಮೀ ಎತ್ತರದಲ್ಲಿದೆ. ಇದು ಸುತ್ತ ದಟ್ಟ ಅರಣ್ಯದಿಂದ ಸುತ್ತುವರೆದಿದ್ದು, ವರುಷವಿಡೀ ಹಿತಕರ ವಾತವರಣವಿರುತ್ತದೆ. ಇದು ಸುಂದರ ಬಾಬಾ ಬುಡನ್‌/ಚಂದ್ರದ್ರೋಣ ಶ್ರೇಣಿಯಿಂದ ಸುತ್ತಿವರೆದಿದ್ದು, ಸಮೃದ್ಧ ಸಸ್ಯವರ್ಗ ಮತ್ತು ಅಮೋಘವಾದ ಬೆಳ್ಳಿ ಜಲಪಾತಗಳಿಂದ ಕೂಡಿದೆ. ಬೆಂಗಳೂರಿನಿಂದ ಸುಮಾರು ೨೫೦ ಕಿ.ಮೀ ದೂರದಲ್ಲಿ ಹಾಗು ಚಿಕ್ಕಮಗಳೂರಿನಿಂದ ೫೫ ಕಿಲೋ ಮೀಟರ್ ದೂರದಲ್ಲಿದೆ. ರಾಜ್ ಭವನದಿಂದ ಅದ್ಭುತವಾದ ಸೂರ್ಯಾಸ್ತದ ದೃಶ್ಯವನ್ನು ನೋಡಬಹುದು. ಸಾಹಸಿಗರಿಗೆ ಇಲ್ಲಿ ಅನ್ವೇಷಿಸಲು ಅನೇಕ ಶಿಖರಗಳು ಮತ್ತು ಸಂಕೀರ್ಣವಾದ ಕಾಡಿನ ಮಾರ್ಗಗಳೂ ಇವೆ. ಈ ಸ್ಥಳದಲ್ಲಿ ಒಂದು ಸುಂದರ ಗುಲಾಬಿ ಹೂವಿನ ಉದ್ಯಾನ ಮತ್ತು ಅನೇಕ ಆಕರ್ಷಣೇಯ ಸ್ಥಳಗಳು ಇವೆ. ಇಲ್ಲಿನಿಂದ ಹತ್ತು ನಿಮಿಷಗಳ ನೆಡಿಗಯ ದೂರದಲ್ಲಿ ಝಡ್-ಪಾಯಿಂಟ್ ಎನ್ನುವ ಸ್ಥಳವಿದೆ, ಈ ಶಿಖರದಿಂದ ಪಶ್ಚಿಮ ಘಟ್ಟಗಳ ಶೋಲಾ ಹುಲ್ಲುಗಾವಲುಗಳ ವೈಮಾನಿಕ ನೋಟವನ್ನು ನೋಡಬಹುದು. ಇದನ್ನು ಕಮಲ್ ಹಾಸನ್ ಅವರ ಪಂಚತಂತ್ರಮ್ ಚಿತ್ರದಲ್ಲಿ ಉಲ್ಲೇಖಿಸಲಾಗಿದೆ. ಕುದುರೆಮುಖ ಮತ್ತು ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಕುದುರೆಮುಖ ಪರ್ವತ ಶ್ರೇಣಿ ಚಿಕ್ಕಮಗಳೂರು ನಗರದಿಂದ ೯೫ ಕೀ.ಮೀ ನೈಋತ್ಯದಲ್ಲಿ ಇದೆ. ಕುದರೆಮುಖದಲ್ಲಿ ಕುದರೆಯ ಮುಖಕ್ಕೆ ಹೊಲುವ ಆಕಾರದ ಶಿಖರವಿದೆ, ಇದರಿಂದ ಈ ಸ್ಥಳಕ್ಕೆ ಕುದರೆಮುಖ ಅನ್ನುವ ಹೆಸರು ಬಂದಿದೆ. ಇಲ್ಲಿ ವಿಶಾಲವಾದ ಪರ್ವತಗಳು ಒಂದಕೊಂದು ಹೊಂದಿಹಕೊಂಡು ಆಳವಾದ ಕಣಿವೆ ಮತ್ತು ಪ್ರಪಾತಗಳುನ್ನು ಸೃಷ್ಟಿಸಿವೆ. ಸಮುದ್ರ ಮಟ್ಟದಿಂದ ೧೮೯೪.೩ ಮೀಟರ ಎತ್ತರದಲ್ಲಿ ಇರುವ ಕುದರೆಮುಖದಲ್ಲಿ ಸಮೃದ್ಧವಾದ ಕಬ್ಬಿಣದ ಅದಿರಿನ ನಿಕ್ಷೇಪಗಳು ಇವೆ. ಕುದರೆಮುಖ ಕಬ್ಬಿಣದ ಅದಿರು ಕಂಪನಿ ಕಭ್ಭಿಣದ ಗಣಿಗಾರಿಗೆ ಮಾಡಿ, ಮಂಗಳೂರು ಮತ್ತು ಪಣಂಬೂರು ಬಂದರಿಗೆ ಕೊಳವೆಗಳ ಮೂಲಕ ಕಳುಹಿಸಿಕೊಡುತ್ತದೆ. ಮುಳ್ಳಯ್ಯನಗಿರಿ: ಕರ್ನಾಟಕದ ಅತಿ ಎತ್ತರದ ಗಿರಿಶಿಖರ ಎಂದು ಖ್ಯಾತಿ ಪಡೆದಿರುವ ಮುಳ್ಳಯ್ಯನಗಿರಿಯು ೬೩೩೦ ಆಡಿ ಎತ್ತರವಿದ್ದು ಪಶ್ಚಿಮ ಘಟ್ಟದ ಚಂದ್ರದ್ರೋಣ ಪರ್ವತ ಶ್ರೇಣಿ ಸಾಲಿಗೆ ಸೇರುತ್ತದೆ. ಬೆಟ್ಟದ ತುದಿಯಲ್ಲಿ ಮುಳ್ಳಯ್ಯನ ದೇವಸ್ಥಾನ ಹಾಗೂ ಮಠವಿದೆ. ಚಾರಣಿಗರಿಗೆ ಮುಳ್ಳಯ್ಯನಗಿರಿ ಪ್ರಶಸ್ತವಾದ ಸ್ಥಳ. ಚಿಕ್ಕಮಗಳೂರಿನಿಂದ ಬೆಟ್ಟದ ಬುಡಕ್ಕೆ ಬಸ್ ಸೌಕರ್ಯ ಇದ್ದು, ತದನಂತರ "ಸರ್ಪನ ದಾರಿ" ಎಂದು ಕರೆಯಲಾಗುವ ಕಡಿದಾದ ಕಾಲುಹಾದಿಯಲ್ಲಿ ನಡೆದು ಬೆಟ್ಟದ ತುದಿ ತಲುಪಬೇಕು. ಮುಳ್ಳಯ್ಯನ ಗಿರಿಯ ಮೇಲಿನಿಂದ ಸಿಗುವ ವಿಹಂಗಮ ನೋಟ ಅತ್ಯಂತ ಆಹ್ಲಾದಕರ ಬಾಬಾ ಬುಡನ್ ಗಿರಿ/ ದತ್ತಗಿರಿ: ಚಿಕ್ಕಮಗಳೂರಿನಿಂದ ಉತ್ತರಕ್ಕೆ ಸುಂದರವಾದ ಬಾಬಾ ಬುಡನ್‌/ಚಂದ್ರದ್ರೋಣ ಶ್ರೇಣಿ ಇದೆ. ಇದು ಚಿಕ್ಕಮಗಳೂರು ನಗರದ ಎಲ್ಲಾ ಭಾಗದಿಂದ ಕಾಣುತ್ತದೆ. ಇದು ಪ್ರಾಚೀನ ಕಾಲದಿಂದ ಸಹ ಹೆಸರು ವಾಸಿಯಾಗಿರುವ ಪರ್ವತ ಶ್ರೇಣಿ. ಈ ಪರ್ವತ ಶ್ರೇಣಿ ಹಿಮಾಲಯ ಮತ್ತು ನೀಲಗಿರಿ ನಡುವಿನ ಅತ್ತಿ ಎತ್ತರದ ಶಿಖರವನ್ನು ಹೊಂದಿದೆ. ಇಲ್ಲಿ ೧೫೦ ವರುಷಗಳ ಹಿಂದೆ ಬಾಬಾ ಬುಡನ್ ಇದ್ದನೆಂದು ಮುಸ್ಲಿಮರು ಮತ್ತು ಗುರು ದತ್ತಾತ್ರೇಯ ಇದ್ದರೆಂದು ಹಿಂದೂಗಳು ನಂಬುತ್ತಾರೆ. ದತ್ತಗಿರಿ/ಬಾಬಾ ಬುಡನ್‌ಗಿರಿಯು ಹಿಂದೂ ಮತ್ತು ಮುಸ್ಲಿಮರಿಬ್ಬರಿಗೂ ಯಾತ್ರಾಸ್ಥಳವಾಗಿರುವ ಅದರ ದೇವಸ್ಥಾನಕ್ಕಾಗಿ ಪರಿಚಿತವಾಗಿದೆ. ದೇವರಮನೆ: ದೇವರ ಮನೆ ಮೂಡಿಗೆರೆ ಪ್ರವಾಸಿಗರನ್ನು ಆಕರ್ಶಿಸುತ್ತಿರುವ ದೇವಾಲಯ. ಇಲ್ಲಿಯ ಪರಿಸರ,ಬೆಟ್ಟ,ಗುಡ್ಡಗಳು ವರ್ಣನಾತೀತ. ಜಲಪಾತಗಳು ಮತ್ತು ಸರೋವರಗಳು ಮಾಣಿಕ್ಯಧಾರಾ: ಮಾಣಿಕ್ಯಧಾರಾ ಜಲಪಾತ ದತ್ತಾತ್ರೇಯ ಪೀಠ ಅಥವಾ ಬಾಬಾಬುಡನ್‌ಗಿರಿಯಿಂದ ಸುಮಾರು ೩ ಕಿ.ಮೀ ದೂರದಲ್ಲಿದೆ. ಈ ಪರ್ವತ ಶ್ರೇಣಿಗಳಲ್ಲಿ ಹುಟ್ಟುವ ಒಂದು ಸಣ್ಣ ಹಳ್ಳವು ಸುಮಾರು ೧೦೦ ಅಡಿಗಳಿಗೂ ಮೀರಿದ ಜಲಪಾತವನ್ನು ನಿರ್ಮಿಸಿದೆ. ಇಲ್ಲಿ ನೀರು ಮಾಣಿಕ್ಯದ ಮಣಿಗಳಂತೆ ಬೀಳುವುದರಿಂದ ಈ ಹೆಸರು ಬಂದಿದೆ. ಇದು ಚಿಕ್ಕಮಗಳೂರು ನಗರದಿಂದ ಸುಮಾರು ೪೦ ಕಿಮಿ ದೂರದಲ್ಲಿದೆ. ಕಲ್ಹತ್ತಿಗಿರಿ: ಮಾಣಿಕ್ಯಧಾರಾ ಜಲಪಾತ ದತ್ತಾತ್ರೇಯ ಪೀಠ ಅಥವಾ ಬಾಬಾಬುಡನ್‌ಗಿರಿಯಿಂದ ಸುಮಾರು ೩ ಕಿ.ಮೀ ದೂರದಲ್ಲಿದೆ. ಈ ಪರ್ವತ ಶ್ರೇಣಿಗಳಲ್ಲಿ ಹುಟ್ಟುವ ಒಂದು ಸಣ್ಣ ಹಳ್ಳವು ಸುಮಾರು ೧೦೦ ಅಡಿಗಳಿಗೂ ಮೀರಿದ ಜಲಪಾತವನ್ನು ನಿರ್ಮಿಸಿದೆ. ಇಲ್ಲಿ ನೀರು ಮಾಣಿಕ್ಯದ ಮಣಿಗಳಂತೆ ಬೀಳುವುದರಿಂದ ಈ ಹೆಸರು ಬಂದಿದೆ. ಇದು ಚಿಕ್ಕಮಗಳೂರು ನಗರದಿಂದ ಸುಮಾರು ೪೦ ಕಿಮಿ ದೂರದಲ್ಲಿದೆ. ಹೆಬ್ಬೆ ಜಲಪಾತ: ಈ ಪ್ರಸಿದ್ಢವಾದ ಕೆಮ್ಮಣ್ಣುಗುಂಡಿಯಿಂದ ೧೦ ಕೀ.ಮೀ. ದೂರದಲ್ಲಿದೆ. ಇಲ್ಲಿ ನೀರಿನ ತೊರೆಗಳು ೧೬೮ ಮೀಟರ್ ಎತ್ತರದಿಂದ ಎರಡು ಹಂತಗಳಲ್ಲಿ ದೊಡ್ಡ ಹೆಬೆ ಮತ್ತು ಚಿಕ್ಕ ಹೆಬ್ಬೆ ಮೂಲಕ ಕೆಳಗೆ ಬಿಳುತ್ತದೆ. ಶಾಂತಿ ಜಲಪಾತ: ಕೆಮ್ಮಣ್ಣುಗುಂಡಿಯಿಂದ ಝಡ್-ಪಾಯಿಂಟ್‌ಗೆ ಹೋಗುವಾಗ ಸಿಗುವ ಜಲಪಾತ. ಹನುಮಾನ ಗುಂಡಿ ಜಲಪಾತ: ಇದು ಕಳಸದಿಂದ ೩೨ ಕೀ.ಮೀ ದೂರದಲ್ಲಿದೆ. ಇಲ್ಲಿ ತೊರೆಗಳು ೩೦ಮೀ ಎತ್ತರದಿಂದ ನೈಸರ್ಗಿಕ ಬಂಡೆಯ ಸ್ತರಗಳ ಮೇಲೆ ಬಿಳುತ್ತದೆ. ಕದಂಬಿ ಜಲಪಾತ: ಇದು ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಇರುವ ಜಲಪಾತ. ಸಿರಿಮನೆ ಜಲಪಾತ: ಇದು ಶೃಂಗೇರಿಯಿಂದ ೧೪ ಕೀ.ಮೀ ದೂರದಲ್ಲಿದೆ. ಸಗೀರ್ ಅಹಮದ್/ದಬ್‌ದಬೆ ಜಲಪಾತ: ಬಾಬಾ ಬುಡನ್ ಗಿರಿ/ ದತ್ತಗಿರಿ ಕಡೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಈ ಜಲಪಾತ ಸಿಗುತ್ತದೆ. ಹಿರೇಕೊಳಲೆ ಕೆರೆ: ಚಿಕ್ಕಮಗಳೂರು ನಗರದ ಹತ್ತಿರ ಇರುವ ಸುಂದರ ಕೆರೆ. ಅಯ್ಯನ ಕೆರೆ: ಚಿಕ್ಕಮಗಳೂರಿನಿಂದ ೨೦ ಕೀ.ಮೀ ದೂರದಲ್ಲಿ ಸಖರಾಯ ಪಟ್ಟದ ಬಳಿ ಇರುವ ದೊಡ್ಡ ಕೆರೆ. [ [ ಜಾರಿ ಜಲಪಾತಗಳು| ಝರಿ ಜಲಪಾತಗಳು:]] ಜರಿ ಜಲಪಾತವನ್ನು ಮಜ್ಜಿಗೆ ಜಲಪಾತ ಎಂದೂ ಕರೆಯುತ್ತಾರೆ, ಇದು ಬಾಬಾ ಬುಡನ್‌ಗಿರಿಯಿಂದ 12 ಕಿಮೀ ದೂರದಲ್ಲಿ ಅತ್ತಿಗುಂಡಿ ಬಳಿ ಇದೆ. ಇದು ಚಿಕ್ಕಮಗಳೂರು ಜಿಲ್ಲೆಯ ಅತ್ಯಂತ ಪ್ರಸಿದ್ಧ ಜಲಪಾತಗಳಲ್ಲಿ ಒಂದಾಗಿದೆ ಮತ್ತು ಜಿಲ್ಲೆಯ ಅತ್ಯುತ್ತಮ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ.ಈ ಸಮ್ಮೋಹನಗೊಳಿಸುವ ಜಲಪಾತವು ದಟ್ಟವಾದ ಕಾಡುಗಳಿಂದ ಆವೃತವಾಗಿದೆ ಮತ್ತು ಕಾಫಿ ತೋಟಗಳು ಪರ್ವತಗಳಲ್ಲಿ ಹುಟ್ಟುವ ಬುಗ್ಗೆಗಳಿಂದ ರಚಿಸಲ್ಪಟ್ಟಿವೆ. .ಪ್ರವಾಸಿಗರು ನೀರಿನಲ್ಲಿ ಈಜಲು ಮತ್ತು ಆಟವಾಡಲು ಮತ್ತು ವಿಶ್ರಾಂತಿ ಪಡೆಯಲು ಜಲಪಾತದ ಕೆಳಭಾಗದಲ್ಲಿ ಪೂಲ್ ಕೂಡ ಇದೆ. ನಗರದ ಬಿಡುವಿಲ್ಲದ ಜೀವನದಿಂದ ಹೊರಬರಲು ಇದು ಸೂಕ್ತ ಸ್ಥಳವಾಗಿದೆ. ಮಂದಿರ ಪಟ್ಟಣಗಳು ಶೃಂಗೇರಿ: ಶೃಂಗೇರಿ ಪಟ್ಟಣ ಚಿಕ್ಕಮಗಳೂರಿನಿಂದ ಪಶ್ಚಿಮಕ್ಕೆ ೯೦ ಕೀ.ಮೀ ದೂರದಲ್ಲಿ ತುಂಗ ನದಿಯ ತೀರದಲ್ಲಿ ಇದೆ. ಶೃಂಗೇರಿ ಪಟ್ಟಣ ಬಹಳ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಶಂಕರಾಚಾರ್ಯರು ಕ್ರಿ.ಶ. ೯ನೇ ಶತಮಾನದಲ್ಲಿ ಸ್ಥಾಪಿಸಿದ ನಾಲ್ಕು ಅದ್ವೈತ ಮಠಗಳಲ್ಲಿ ಮೊದಲನೆಯದು ಇರುವುದು ಇಲ್ಲಿಯೇ. ಇಲ್ಲಿರುವ ಖ್ಯಾತ ವಿದ್ಯಾಶಂಕರ ದೇವಸ್ಥಾನವನ್ನು ಹೊಯ್ಸಳರು ಕಟ್ಟಿದರು ಮತ್ತು ಮುಂದೆ ಇದನ್ನು ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರು ಪೂರ್ಣಗೊಳಿಸಿದರು. ಈ ದೇವಸ್ಥಾನದ ಸುತ್ತಲೂ ಇರುವ ಹನ್ನೆರಡು ಕಂಬಗಳಲ್ಲಿ ಪ್ರತಿಯೊಂದರ ಮೇಲೆಯೂ ಬೇರೆ ಬೇರೆ ತಿಂಗಳುಗಳಲ್ಲಿ ಸೂರ್ಯರಶ್ಮಿ ಬೀಳುತ್ತದೆ. ಹೊರನಾಡು: ಹೊರನಾಡು ಇದು ರಾಜ್ಯದ ಪ್ರಸಿದ್ದ ಯಾತ್ರಸ್ತಳವಾಗಿದೆ. ಹೊರನಾಡು ಚಿಕ್ಕಮಗಳೂರು ನಗರದಿಂದ 100 ಕಿಮೀ ನೈಋತ್ಯಕ್ಕೆ ಇದೆ. ಇಲ್ಲಿ ಅನ್ನಪೂರ್ಣೇಶ್ವರಿಯ ಪುರತಾನ ದೇವಾಲಯವಿದೆ, ಈ ದೇವಾಲಯವನ್ನು ಇತ್ತೀಚಿಗೆ ಜೀರ್ಣೋದ್ಧಾರ ಮಾಡಲಾಗಿದೆ. ಇದು ಅಗಸ್ತ್ಯ ಕ್ಷೇತ್ರವೆಂದು ಪ್ರಸಿದ್ದಿ ಆಗಿದ್ದು, ಇಲ್ಲಿ ಅಗಸ್ತ್ಯ ಮುನಿಗಳಿಂದ ಪ್ರತಿಸ್ಟಾಪನೆ ಯಾಗಿರುವ ಆದಿ-ಶಕ್ತ್ಯತ್ಮಕ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ವಿಗ್ರಹಾರದನೆ ನಡೆಯುತದೆ. ಶುಕ್ರವಾರವು ಅಮ್ಮನವರ ವಾರವೆಂದು, ಈ ದಿನ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಸ್ಥಳವು ಹೆಚ್ಚು ಯಾತ್ರಾರ್ಥಿಗಳನ್ನು ಆಕರ್ಷಿಸುತ್ತದೆ, ಇಲ್ಲಿ ಯಾತ್ರಾರ್ಥಿಗಳಿಗೆ ಉಚಿತ ಊಟ್ಟ ಮತ್ತು ವಸತಿ ಸೌಲಭ್ಯವನ್ನು ದೇವಾಲಯವು ಒದಗಿಸುತ್ತದೆ. ಈ ನಗರದ ಹತ್ತಿರದಲ್ಲಿ ಪಂಚತೀರ್ಥ ಎಂದು ಕರೆಯಲಾಗುವ ಐದು ಕೊಳಗಳು ಇವೆ. ಕಳಸ: ಕಳಸ ಚಿಕ್ಕಮಗಳೂರು ನಗರದ ನೈಋತ್ಯಕ್ಕೆ ೯೨ ಕೀ.ಮೀ ದೂರದಲ್ಲಿ, ಭದ್ರ ನದಿಯ ತೀರದಲ್ಲಿರುವ ನಗರ. ಈ ನಗರ ಪಶ್ಚಿಮ ಘಟ್ಟದ ಎತ್ತರದ ಗಿರಿಶಿಖರಗಳಿಂದ ಸುತ್ತುವರೆದಿದೆ ಮತ್ತು ಇದನ್ನು ಭದ್ರ ತೀರದಲ್ಲಿ ಇರುವ ಪಂಚ ಕ್ಷೇತ್ರದಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಕಳಸದ ಹತ್ತಿರ ಪಂಚ ತೀರ್ಥ ಎನ್ನುವ ಐದು ಪವಿತ್ರ ಕೊಳಗಳು ಇವೆ. ಇಲ್ಲಿ ಒಂದು ಸಣ್ಣ ಗುಡ್ಡದ ಮೇಲೆ ಹೊಯ್ಸಳ ಶೈಲಿಯಲ್ಲಿ ಕ್ಷೇತ್ರಪಾಲ ಸೋಪ್ ಕಲ್ಲು ಇರುವ ಈಶ್ವರನಿಗೆ ಮೀಸಲಾಗಿರುವ ದೇವಾಲಯವಿದೆ. ಪಂಚ ತೀರ್ಥದ ಕೊಳ ಒಂದರ ಹತ್ತಿರ ಮದ್ವಚಾರ್ಯ ಬಂಡೆ ಎನ್ನುವ ದೊಡ್ಡ ಬಂಡೆ ಇದೆ. ಇದನ್ನು ಇಲ್ಲಿ ದ್ವೈತ ಸಿದ್ದಾಂತ ಶಾಲೆಯ ಸಂಸ್ಥಾಪಕರದ ಮದ್ವಚಾರ್ಯರು ಇರಿಸಿದರೆಂದು ನಂಬಲಾಗಿದೆ. ಈ ಬಂಡೆ ಮೇಲೆ ಆಚಾರ್ಯರ ಪ್ರತಿಮೆಯನ್ನು ಕೆತ್ತಲಾಗಿದೆ. ಗುರು ದತ್ತಾತ್ರೇಯ ಪೀಠ/ ಬಾಬಾ ಬುಡನ್ ದರ್ಗಾ: ಬಾಬಾ ಬುಡನ್ ಗಿರಿ/ ದತ್ತಗಿರಿಯ ಮೇಲೆ ಹಿಂದು ಮತ್ತು ಮುಸ್ಲಿಮರು ಸಮಾನವಾಗಿ ಪೂಜಿಸುವ ಇನಂ ದತ್ತಾತ್ರೇಯ ಪೀಠವಿದೆ. ಇಲ್ಲಿರಿವ ಒಂದು ಬಗೆಯ ಕೆಂಪು ಅಥಾವ ಹಳದಿ ಜೇಡಿಮಣ್ಣಿನ ಗೂಹೆಯು ಸ್ವಾಮಿ ದತ್ತಾತ್ರೇಯ ಮತ್ತು ಹಜರತ್ ದಾದಾ ಹಯಾತ್ ಮೀರ್ ಖಲಂದರ್ ವಾಸದಿಂದ ಪವಿತ್ರವಾಗಿದೆ ಎಂದು ನಂಬುತ್ತಾರೆ. ಇಲ್ಲಿ ಫಕೀರ್ ಅವರು ಪೂಜೆ ಮಾಡುತ್ತಾರೆ ಮತ್ತು ಇಲ್ಲಿ ನೆಡೆಯುವ ವಾರ್ಷಿಕ ಜಾತ್ರೆಯಲ್ಲಿ ಹಿಂದೂ ಮತ್ತು ಮುಸ್ಲಿಮರು ಉತ್ಸಾಹದಿಂದ ಪಾಲ್ಗೊಳುತ್ತಾರೆ. ಅಮೃತಪುರ: ಚಿಕ್ಕಮಗಳೂರಿನಿಂದ ೬೭ ಕೀ.ಮೀ ಉತ್ತರಕ್ಕೆ ಅಮೃತಪುರವಿದೆ. ಅಮೃತಪುರವು ಹೊಯ್ಸಲ ರಾಜ ಎರಡನೇ ವೀರ ಬಲ್ಲಾಳ ಕಟ್ಟಿಸಿದ್ದ ಅಮೃತೇಶ್ವರ ದೇವಾಲಯಕ್ಕೆ ಪ್ರಸಿದ್ಧವಾಗಿದೆ. ಮುಟ್ಟಲು ನಾಜೂಕದ , ಸ್ವಂತಿಕೆಯ ವಿನ್ಯಾಸ ಹೊಂದಿರುವ ಮತ್ತು ವೈಶಿಷ್ಟ್ಯತೆಯಿಂದ ಇದು ಹೊಯ್ಸಲ ಕಾಲದ ಗಮನಾರ್ಹ ದೇವಾಲಯಗಳಲ್ಲಿ ಒಂದಾಗಿದೆ. ಬೆಳವಾಡಿ: ಬೆಳವಾಡಿ ಚಿಕ್ಕಮಗಳೂರು ಜಿಲ್ಲೆಯ ಆಗ್ನೇಯ ದಿಕ್ಕಿನಲ್ಲಿ ೨೯ ಕೀ.ಮೀ. ದೂರದಲ್ಲಿ ಇದೆ. ಇದು ಚಿಕ್ಕಮಗಳೂರು-ಜಾವಗಲ್ ಮಾರ್ಗದಲ್ಲಿ ಮತ್ತು ಹಳೇಬೀಡಿನ ವಾಯುವ್ಯ ದಿಕ್ಕಿನಲ್ಲಿ ೧೦ಕೀ.ಮೀ ದೂರದಲ್ಲಿದೆ. ಬೆಳವಾಡಿಯು ಅಲಂಕೃತವಾದ ವೀರನಾರಾಯಣ ದೇವಸ್ಥಾನಕ್ಕೆ ಹೆಸರುವಾಸಿಯಾಗಿದೆ. ಬೆಳವಾಡಿ ಉದ್ಭವ ಗಣಪತಿ ದೇವಸ್ಥಾನಕ್ಕೆ ಸಹ ಪ್ರಸಿದ್ಧಿಯಾಗಿದೆ. ನರಸಿಂಹರಾಜಪುರ: ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದ ಸಿಂಹನಗದ್ದೆಯಲ್ಲಿ ಸಿಂಹನಗದ್ದೆ ಜ್ವಲಮಾಲಿನಿ ದೇವಾಲಯವಿದೆ. ಇದು ರಾಜ್ಯದ ಪ್ರಮುಖ ಜೈನ ದೇವಾಲಯಗಳಲ್ಲಿ ಒಂದು. ದೇವಾಲಯದಲ್ಲಿ ಮುಖ್ಯ ದೇವರಾದ ಜ್ವಲಮಾಲಿನಿ ದೇವರ ಆಕರ್ಷಕ ಕಪ್ಪು ಬಣ್ಣದ ವಿಗ್ರಹವಿದೆ. ಈ ವಿಗ್ರಹ ೧೫ನೇ ಮತ್ತು ೧೬ನೇ ಶತಮಾನದ ಇತಿಹಾಸಕ್ಕೆ ಸೇರಿದ್ದಾಗಿದೆ. ದೇವಸ್ಥಾನ ವಿಶಾಲವಾದ ಸಭಾಂಗಣ ಮತ್ತು ಗರ್ಭಗುಡಿಯನ್ನು ಹೊಂದಿದೆ. ಈ ದೇವಾಲಯವು ದೇಶ ವಿದೇಶದಿಂದ ದೊಡ್ಡ ಸಂಖ್ಯಯಲ್ಲಿ ಭಕ್ತರನ್ನು ಆಕರ್ಷಿಸುತ್ತದೆ. ೧೯೯೪ದರಲ್ಲಿ ಈ ದೇವಲಯವನ್ನು ನವೀಕರಿಸಲಾಯಿತು. ಶ್ರೀ ಕ್ಷೇತ್ರ ಸಿಂಹನಗದ್ದೆ  ಜೈನ್ ಧರ್ಮದ ಎಂಟನೇಯ ತೀರ್ಥಂಕರ ಶ್ರೀ ಭಗವಾನ್ ಚಂದ್ರಪ್ರಭುರವರ ಯಕ್ಷಿಣಿ (ರಕ್ಷಕಿ ಆತ್ಮ) ಜ್ವಲಮಾಲಿನಿ ದೇವಿಯ ಅತಿಶಯಕ್ಕೆ (ಪವಾಡಗಳ ಸ್ಥಳ) ಪ್ರಸಿದ್ಧಿಯಾಗಿದೆ. ವನ್ಯಜೀವನ ಭದ್ರಾ ವನ್ಯಜೀವಿ ಅಭಯಾರಣ್ಯ: ಭದ್ರಾ ವನ್ಯಜೀವಿ ಅಭಯಾರಣ್ಯ ೪೯೫ ಚದರ ವ್ಯಾಪಿಸಿರುವ ವನ್ಯಜೀವಿ ಅಭಯಾರಣ್ಯ ಮತ್ತು ಹುಲಿ ಯೋಜನೆಯ ಮೀಸಲು ಪ್ರದೇಶ, ಈ ಪ್ರದೇಶ ತುಂಗಭದ್ರಾ ನದಿಯ ಒಂದು ಪ್ರಮುಖ ಜಲಾನಯನ ಪ್ರದೇಶ. ಇಲ್ಲಿ ಕಟ್ಟಿರುವ ದೊಡ್ಡ ಹಣೆಕಟ್ಟು ದಕ್ಷಿಣ ಕರ್ನಾಟಕದ ಮಳೆ ಕಡಿಮೆ ಇರುವ ಪ್ರದೇಶಗಳಿಗೆ ನೀರು ಪೂರೈಕೆಯ ಮುಖ್ಯ ಮೂಲವಾಗಿದೆ. ಇಲ್ಲಿನ ಕಾಡುಗಳು ಬಿದಿರಿನಿಂದ ಫಲವತ್ತಾಗಿದೆ ಮತ್ತು ಇಲ್ಲಿನ ಪಕ್ಶಿ ಪ್ರಭೇದಗಳು ಮಲ್‌ಬಾರ್ ಮತ್ತು ಸಹ್ಯಾದ್ರಿ ಶ್ರೇಣಿಗೆ ಅನನ್ಯವಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಕುದುರೆಮುಖ ರಾಷ್ಟ್ರೀಯ ಉದ್ಯಾನವನನ್ನು ಉಷ್ಣವಲಯದ ತೇವಭರಿತ ನಿತ್ಯಹರಿದ್ವರ್ಣ ಕಾಡಾಗಿದೆ. ಇದು ಪಶ್ಚಿಮ ಘಟ್ಟದಲ್ಲಿರುವ ವನ್ಯಜೀವಿ ರಕ್ಷಿತ ಪ್ರದ್ರೇಶವಾಗಿದೆ. ಪಶ್ಚಿಮ ಘಟ್ಟವನ್ನು ಜೈವಿಕ ವೈವಿಧ್ಯತೆ ಹೊಂದಿರುವ ವಿಶ್ವದಲ್ಲಿರುವ ೨೫ ಪ್ರದೇಶಗಳಲ್ಲಿ ಒಂದು ಗುರುತಿಸಲಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವನ್ಯಜೀವಿ ಸಂರಕ್ಷಣಾ ಸಮಾಜ( ವೈಲ್ಡ್ಲೈಫ್ ಕನ್ಸರ್ವೇಶನ್ ಸೊಸೈಟಿ-ಡಬ್ಲೂ.ಸಿ.ಎಸ್.) ಮತ್ತು ವರ್ಲ್ಡ್ ವೈಡ್ ಫಂಡ್- ಯು.ಎಸ್.ಏ ಜಂಟಿಯಾಗಿ ಅಭಿವೃದ್ಧಿ ಮಾಡಿರುವ ಪಟ್ಟಿಯಲ್ಲಿ, ಜಾಗತಿಕ ಮಟ್ಟದ ಹುಲಿ ಸಂರಕ್ಷಣೆ ಆದ್ಯತೆ-೧ ರಲ್ಲಿ ಬರುತ್ತದೆ. ಸಿರಿಮನೆ ಫಾಲ್ಸ್ ಸಿರಿಮಾನೆ ಫಾಲ್ಸ್ ಒಂದು ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಇದು ಬೆಂಗಳೂರಿನಿಂದ ೩೦೦ ಕಿ.ಮೀ ಮತ್ತು ಕಿಗ್ಗಾ ಮತ್ತು ಚಿಕ್ಕಮಗಳೂರಿನಿಂದ ೫ ಕಿ.ಮೀ ದೂರದಲ್ಲಿದೆ. ಇದು ಪಶ್ಚಿಮ ಘಟ್ಟಗಳಲ್ಲಿರುವ ಹಲವಾರು ಜಲಪಾತಗಳಲ್ಲಿ ಒಂದಾಗಿದೆ. ಇದು ಸುಂದರ ನೋಟದಿಂದ ಅದ್ಭುತವಾಗಿದೆ. ನೀರು ಕಾಫಿ ಎಸ್ಟೇಟುಗಳು ಕೆಳಗಿಳಿಯುತ್ತಿದೆ. ಒಂದು ದಿನದಲ್ಲಿ ಇದನ್ನು ಸುಲಭವಾಗಿ ತಲುಪಬಹುದು ಮತ್ತು ಭೇಟಿ ಮಾಡಬಹುದು, ಆದ್ದರಿಂದ, ಶೃಂಗೇರಿ ದೇವಸ್ಥಾನ, ಆಗುಂಬೆ ಮತ್ತು ಇತರ ಸ್ಥಳಗಳೊಂದಿಗೆ ಭೇಟಿ ನೀಡಲು ಸೂಕ್ತವಾಗಿದೆ. ಇದು ೪೦ ಅಡಿ ಎತ್ತರದಲ್ಲಿದೆ ಮತ್ತು ಜಲಪಾತದ ರಸ್ತೆ ಇದೆ, ಅದು ಜಲಪಾತಕ್ಕೆ ಸುಲಭ ಪ್ರವೇಶವನ್ನು ಒದಗಿಸುತ್ತದೆ. ಮಳೆಗಾಲದ ಸಮಯದಲ್ಲಿ ಹತ್ತಿರಕ್ಕೆ ಹೋಗಲುಸಾಧ್ಯವಿರದಿದ್ದರೂ ಸಹ ಕೆಳಗಡೆ ಹೋಗಬಹುದು ಮತ್ತು ಜಲಪಾತವನ್ನು ಆನಂದಿಸಬಹುದು. ಕಿಗ್ಗಾ: ಇದು ಒಂದು ಸಣ್ಣ ಪಟ್ಟಣವಾಗಿದ್ದು, ಜಲಪಾತದಿಂದ ಸುಲಭವಾಗಿ ತಲುಪಬಹುದು. ಈ ಪಟ್ಟಣವು ಟ್ರೆಕ್ಕಿಂಗ್ ಗೆ ಹೆಸರುವಾಸಿಯಾಗಿದೆ. ಹರಿ ದೇವಾಲಯ: ಈ ಶಿವ ದೇವಾಲಯವು ಹರಿಹರಪುರದಲ್ಲಿದೆ. ಸುಮಾರು ೪೦೦ ವರ್ಷಗಳ ಹಿಂದೆ ಇದನ್ನು ನಿರ್ಮಿಸಲಾಗಿದೆ ಎಂದು ನಂಬಲಾಗಿದೆ. ಶರದಾ ದೇವಸ್ಥಾನ: ಇದು ೧೪ ನೇ ಶತಮಾನದಲ್ಲಿ ನಿರ್ಮಿಸಲಾದ ದೇವಾಲಯವಾಗಿದ್ದು, ಶರದಾಂಬ ದೇವತೆಗೆ ಅರ್ಪಿತವಾಗಿದೆ. ಈ ದೇವಸ್ಥಾನವು ಹಲವು ಭವ್ಯವಾದ ಕಂಬಗಳು ಮತ್ತು ಮಹಾ ಮಂಟಪವನ್ನು ಹೊಂದಿದೆ. ಇತರ ಪಟ್ಟಣಗಳು ಚಿಕ್ಕಮಗಳೂರು ಜಿಲ್ಲೆಯ ಕೆಲ ಇತರ ಮುಖ್ಯ ಪಟ್ಟಣಗಳೆಂದರೆ ಬೀರೂರು, ಕಡೂರು, ನರಸಿಂಹರಾಜಪುರ, ಕೊಪ್ಪ, ಮೂಡಿಗೆರೆ, ತರೀಕೆರೆ. ತಾಲೂಕುಗಳು ಚಿಕ್ಕಮಗಳೂರು ಕಡೂರು ಕೊಪ್ಪ ತರೀಕೆರೆ ನರಸಿಂಹರಾಜಪುರ ಮೂಡಿಗೆರೆ ಶೃಂಗೇರಿ ಕಳಸ ಅಜ್ಜಂಪುರ ಚಿತ್ರಪಟ ಇವನ್ನೂ ನೋಡಿ ಕರ್ನಾಟಕ ಬಾಹ್ಯ ಸಂಪರ್ಕಗಳು ಚಿಕ್ಕಮಗಳೂರು ಜಿಲ್ಲೆಯ ಅಧಿಕೃತ ಸರ್ಕಾರಿ ತಾಣ ಚಿಕ್ಕಮಗಳೂರು ಪ್ರವಾಸ ಚಿಕ್ಕಮಗಳೂರು ಜಿಲ್ಲೆಯ ನಕ್ಷೆ ದಟ್ಸ್ ಕನ್ನಡ.ಕಾಂನಲ್ಲಿನ ಸಮಗ್ರ ಲೇಖನಗಳು ಉಲ್ಲೇಖಗಳು ಭೂಗೋಳ ಕರ್ನಾಟಕದ ಜಿಲ್ಲೆಗಳು ಚಿಕ್ಕಮಗಳೂರು ಜಿಲ್ಲೆ ಚಿಕ್ಕಮಗಳೂರು ಜಿಲ್ಲೆಯ ತಾಲೂಕುಗಳು ಕರ್ನಾಟಕದ ಪ್ರಮುಖ ಸ್ಥಳಗಳು
1074
https://kn.wikipedia.org/wiki/%E0%B2%B9%E0%B2%BE%E0%B2%B5%E0%B3%87%E0%B2%B0%E0%B2%BF
ಹಾವೇರಿ
ಅಜೆರ್ಬೈಜಾನ್‌ನ ಹಳ್ಳಿಗಾಗಿ, ಹೋವರಿ ನೋಡಿ . ಹಾವೇರಿ ಭಾರತದ ಕರ್ನಾಟಕದ ಒಂದು ನಗರ, ಇದು ಹಾವೇರಿ ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. ಹಾವೇರಿ ಎಂಬ ಹೆಸರು ಹಾವು ಮತ್ತು ಕೇರಿ ಎಂಬ ಕನ್ನಡ ಪದಗಳಿಂದ ಬಂದಿದೆ, ಇದರರ್ಥ ಹಾವುಗಳ ಸ್ಥಳ . ಏಲಕ್ಕಿ ಹೂಮಾಲೆಗಳಿಗೆ ಹಾವೇರಿ ಪ್ರಸಿದ್ಧವಾಗಿದೆ. ಪ್ರಾಚೀನ ದಿನಗಳಲ್ಲಿ ಹಾವೇರಿಯಲ್ಲಿ ಸುಮಾರು 1000 ಮಠಗಳು (ಪವಿತ್ರ ಧಾರ್ಮಿಕ ಸ್ಥಳಗಳು; ಕನ್ನಡ - ಥಾಥ್) ಇದ್ದವು ಎಂದು ಹೇಳಲಾಗುತ್ತದೆ. ಪ್ರಸಿದ್ಧ ಮಠಗಳಲ್ಲಿ ಒಂದು ಹುಕ್ಕೇರಿ ಮಠ . ಹಾವೇರಿಯ ಬ್ಯಾಡಗಿ ಕೆಂಪು ಮೆಣಸಿನಕಾಯಿಗಳನ್ನು ಮಾರಾಟ ಮಾಡಲು ಸಹ ಪ್ರಸಿದ್ಧವಾಗಿದೆ, ಇದು ಭಾರತದಾದ್ಯಂತ ಪ್ರಸಿದ್ಧವಾಗಿದೆ. ಸುಮಾರು 25   ಕಿಮೀ ದೂರದಲ್ಲಿ, ಕವಿ [[ಕನಕದಾಸರು|ಕನಕದಾಸನ ಜನ್ಮಸ್ಥಳವಾದ ಬಾಡ ಎಂಬ ಸ್ಥಳವಿದೆ,ತ್ರಿಪದಿ ಜನಕ ಸರ್ವಜ್ಞ ಜನಿಸಿದ ನಾಡುಹಾವೇರಿ, ಸರ್ವಜ್ಞನ ಜನ್ಮಸ್ಥಳ ಅಬಲೂರು ಮತ್ತು ಭಗವಾನ್ ಸರಹುನಾಥರ ಜನ್ಮ ಸ್ಥಳ ಹಾನಗಲ್ ನ ಹುಲ್ಲತ್ತಿ ೫೫ಕಿ.ಮಿ ದೂರದಲ್ಲಿದೆ. ಹಾವೇರಿ ಬೆಂಗಳೂರಿನಿಂದ ರೈಲಿನಲ್ಲಿ 7 ಗಂಟೆಗಳ ದೂರದಲ್ಲಿದೆ. ಇದು ಹುಬ್ಬಳ್ಳಿ ಮತ್ತು ದಾವಣಗೆರೆ ನಡುವಿನ ಮಧ್ಯದ ನಿಲ್ದಾಣವಾಗಿದೆ. ಇದು ಸ್ಟಾಪ್ 76.5 ಆಗಿದೆ   ಮೊದಲು ಕಿಮೀ ಹುಬ್ಬಳ್ಳಿ ಮತ್ತು 72   ದಾವಣಗೆರೆ ನಂತರ ಕಿ.ಮೀ. ರಸ್ತೆ ಮೂಲಕ, ಇದು ಸುಮಾರು 340 ಆಗಿದೆ   ಎನ್ಎಚ್ -4 ರಲ್ಲಿ ಬೆಂಗಳೂರಿನಿಂದ ಮುಂಬೈ ಕಡೆಗೆ ಕಿ.ಮೀ. ಇಇದೆ.ದು 307 ರಲ್ಲಿದೆ   ಬಂದರು ನಗರ ಮಂಗಳೂರಿನ ಉತ್ತರಕ್ಕೆ ಕಿ.ಮೀ. ಹಾವೇರಿ ಶಿಕ್ಷಣದಲ್ಲಿ ಮಧ್ಯಮ ಹಂತವನ್ನು ಹೊಂದಿದ್ದಾರೆ. ಹಾವೇರಿ ದೇವಗಿರಿಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು 2007 ರಲ್ಲಿ ಪ್ರಾರಂಭಿಸಿದರು. ಹಾವೇರಿಯ ಇತಿಹಾಸ ಪ್ರಮುಖ ಪ್ರದೇಶವಾಗಿದೆ ಪಶ್ಚಿಮ ಚಾಲುಕ್ಯ ಸ್ಮಾರಕಗಳ ಸ್ಥಳಗಳಲ್ಲಿ ಒಳಗೊಂಡಿದೆ ಬಾದಾಮಿ, ಹಲಸಿ, Annigeri, ಮಹದೇವ ದೇವಾಲಯ (ಇಟಗಿ), ಗದಗ, ಲಕ್ಕುಂಡಿ, ಲಕ್ಷ್ಮೇಶ್ವರ, ಡಂಬಳ, ಹಾವೇರಿ, ಬಂಕಾಪುರ, Rattahalli, Kuruvatti, Bagali, Balligavi, Chaudayyadanapura, Galaganatha, ಹಾನಗಲ್ . ಈ ಪ್ರದೇಶಗಳಲ್ಲಿ ಸೋಪ್ ಸ್ಟೋನ್ ಹೇರಳವಾಗಿ ಕಂಡುಬರುವುದರಿಂದ ಅದು ಸಾಧ್ಯವಾಯಿತು. ಪಾಶ್ಚಿಮಾತ್ಯ ಚಾಲುಕ್ಯ ವಾಸ್ತುಶಿಲ್ಪ ಚಟುವಟಿಕೆಯ ಕೋರ್ ಪ್ರದೇಶದ ಅಡಿಯಲ್ಲಿ ಹವೇರಿ ಬರುತ್ತದೆ. ಹವೇರಿ ಜಿಲ್ಲೆಯ ಇತಿಹಾಸವು ಪೂರ್ವ-ಐತಿಹಾಸಿಕ ಅವಧಿಗೆ ಸೇರಿದೆ. ವಿವಿಧ ಆಡಳಿತಗಾರರ ಸುಮಾರು 1300 ಶಿಲಾ ಬರಹಗಳು ಚಾಲುಕ್ಯರು, ರಾಸ್ತಕುಟರು ಜಿಲ್ಲೆಯಲ್ಲಿ ಕಂಡುಬರುತ್ತವೆ. ಬಂಕಪುರ ಚಲ್ಲಕೇತುರು, ಗುಟ್ಟಾವುಲ ಗುಟ್ಟಾರು, ಹಂಗಲ್‌ನ ಕದಂಬಸ್ ಮತ್ತು ನೂರುಂಬಾಡ್ ಪ್ರಸಿದ್ಧ ಸಮಂತಾ ಆಡಳಿತಗಾರರು. ಕನ್ನಡ ಆದಿಕವಿ ಪಂಪಾ ಅವರ ಶಿಕ್ಷಕ ದೇವೇಂದ್ರಮುನಿಗಲು ಮತ್ತು ರನ್ನ ಶಿಕ್ಷಕ ಅಜಿತಾಸೇನಾಚಾರ್ಯ   ಚಾವುಂಡರಾಯನ ವಾಸಿಸುತ್ತಿದ್ದರು ಬಂಕಾಪುರ . ಇದು ಹೊಯ್ಸಳ ವಿಷ್ಣುವರ್ಧನ ಎರಡನೇ ರಾಜಧಾನಿಯೂ ಆಗಿತ್ತು. Guttaru 12 ನೇ ಶತಮಾನದ ನಂತರದ ಭಾಗದಲ್ಲಿ ಸಮಯದಲ್ಲಿ ಮತ್ತು ಆಫ್ Mandaliks ಮಾಹಿತಿ Guttavol (Guttal) ಹಳ್ಳಿಯಿಂದ 13 ನೇ ಶತಮಾನದ ಅಂತ್ಯದಲ್ಲಿ ರವರೆಗೆ ಆಳ್ವಿಕೆ ಚಾಲುಕ್ಯ ಸ್ವತಂತ್ರವಾಗಿ ಕೆಲವು ಬಾರಿ, ಮತ್ತು Mandaliks ಮಾಹಿತಿ Seunas ದೇವಗಿರಿಯ. Shasanas ಕಂಡುಬರುವ Chaudayyadanapura (Choudapur), Guttal ಹತ್ತಿರದ ಹಳ್ಳಿಯ, Mallideva ಚಾಲುಕ್ಯರ 6 ನೇ ವಿಕ್ರಮಾದಿತ್ಯನ Mandalika ಎಂದು ತಿಳಿದುಬರುತ್ತದೆ. Jatacholina, Mallideva ನಾಯಕತ್ವದಲ್ಲಿ ನಲ್ಲಿ Mukteshwara ಕಟ್ಟಿಸಿದರು Chaudayyadanapura (Choudapur). ಕಲ್ಯಾಣಿ ಚಾಲುಕ್ಯರ ಕಾಲದಲ್ಲಿ ನೂರುಂಬಾದ್‌ನ ಕಡಂಬರು ಸುಮಾರು 100 ಗ್ರಾಮಗಳನ್ನು ಆಳಿದರು, ರಟ್ಟಿಹಳ್ಳಿಯನ್ನು ತಮ್ಮ ರಾಜಧಾನಿಯಾಗಿರಿಸಿಕೊಂಡರು. ಜಿಲ್ಲೆಯ ಸರಹು ನಾಗರಾಜನ್ (ಭಗವಾನ್ ಸರಹುನಾಥ್), ಸಾಂಟಾ ಶಿಶುನಾಳ ಶರೀಫ್, ಮಹಾನ್ ಸಂತ Kanakadasaru, Sarvajnya, ಹಾನಗಲ್ಲ ಕುಮಾರ Shivayogigalu, Wagish Panditaru, ಬರಹಗಾರ Galaganatharu, Ganayogi ಪಂಚಾಕ್ಷರಿ Gavayigalu, Gnyana ಪೀಠಗಳಲ್ಲಿ ಪ್ರಶಸ್ತಿ Dr.VKGokak ಮತ್ತು ಅನೇಕ ಹೆಚ್ಚು ಜನ್ಮಸ್ಥಾನ ಎಂದು ಹೆಮ್ಮೆಯಿದೆ. ಸ್ವಾತಂತ್ರ್ಯ ಹೋರಾಟಗಾರರಾದ ಮೈಲಾರ ಮಹಾದೇವಪ್ಪ ಮತ್ತು ಗುಡ್ಲೆಪ್ಪ ಹಲ್ಲಿಕೆರೆ. ಭಗವಾನ್ ಸರಹುನಾಥರ ಇತಿಹಾಸ ಜಿಲ್ಲೆಯ ಹುಲ್ಲತ್ತಿ ಗ್ರಾಮದಲ್ಲಿ ಭಗವಾನ್ ಸರಹುನಾಥರು ಜನಿಸಿರುವುದು ನಾಡಿಗೆ ಹೊಸ ಶೋಭೆಯನ್ನು ತಂದಿದೆ. ಅವರನ್ನು ಅಲ್ಲಾಹು ಯೆವೋಹನು ಎಂತಲೂ ಕರೆಯುತ್ತಾರೆ. ಅಲ್ಲಾಹು ಯೆಹೋವ(Allahu Jehovah) - ಸರ್ವಶಕ್ತ ಪ್ರಭು ಮತ್ತು ಬ್ರಹ್ಮಾಂಡದ ಸೃಷ್ಟಿಕರ್ತ - ಸರಹು ನಾಗರಾಜನ್ - ಸಾರಾಹು ನಾಜರಾಝಾನ್, ಅರೇಬಿಕ್ - الله يهوه, ಸ್ಪ್ಯಾನಿಷ್ - ಅಲ್ಲಾಹು ಯೆಹೋವ; ದೇವರನ್ನು ಇಸ್ಲಾಂನಲ್ಲಿ ಅಲ್ಲಾ ಮತ್ತು ಇಸ್ರೇಲ್ನಲ್ಲಿ ಯೆಹೋವನು ಎಂದು ಕರೆಯಲಾಗುತ್ತದೆ. ಅದರ ಹೊರತಾಗಿ ಸರ್ವಶಕ್ತ ದೇವರನ್ನು ದೇವರ ಕಣ ಎಂದು ಗುರುತಿಸಲಾಗಿದೆ. ಆದರೆ ಅವು ದೇವರ ಕಣಗಳಲ್ಲ; ಬದಲಾಗಿ ಅವು ಬ್ರಹ್ಮಾಂಡದ ಶಕ್ತಿಯನ್ನು ಅರ್ಥೈಸುತ್ತವೆ . ಅದು ದೇವರ ಭಾಗವಲ್ಲ; ಅವನೇ ದೇವರು. ಅಲ್ಲಾಹು ಮತ್ತು ಯೆಹೋವನು ಪ್ರತ್ಯೇಕ ದೇವರುಗಳಲ್ಲ. ಅಲ್ಲಾಹು ಯೆವೋಹ- ಭೂಮಿಗೆ ಬಂದು ಮೊದಲು ಸರಹು ನಾಗರಾಜನಾದನು. ಜನರಿಗೆ ಅವರನ್ನು ಸರಹು ನಾಗರಾಜನ್ ಎಂದು ಕರೆಯುವುದು ಸ್ವಲ್ಪ ಕಷ್ಟ, ಆದರೆ ಅವರನ್ನು ಸರಹುನಾಥ ಎಂದು ಕರೆಯಲಾಗುತ್ತದೆ. ಆದಾಗ್ಯೂ, ಕೆಲವು ಹಿಂದೂಗಳು ಅಲ್ಲಾಹು ಯೆಹೋವನನ್ನು ಸರಹುನಾಥ ಎಂದೂ ಕರೆಯುತ್ತಾರೆ. ಆದರೆ ಭಗವಾನ್ ಹರಿಹರ ಸರಹುನಾಥ ಮತ್ತು ಸರಹುನಾಥ ಇಬ್ಬರೂ ಒಂದೇ ಅಲ್ಲ. ಹರಿಹರ ಸರಹುನಾಥನನ್ನು ಅಲ್ಲಾಹು ಯೆಹೋವನು ಸೃಷ್ಟಿಸಿದ ಕಾರಣ, ಅವನು ತನ್ನ ಹಳೆಯ ಹೆಸರಿನಿಂದ ಹರಿಹರ ಸರಹುನಾಥ ಎಂದು ಹೆಸರಿಸಿಕೊಂಡನು. ಅಂದರೆ ಹರಿಹರ ಸರಹುನಾಥ ಅಲ್ಲಾಹು ಯೆಹೋವನ ಕಣವಾಗಿತ್ತು. ೨೦೫೦ ರ ವೇಳೆಗೆ ಸಂಪೂರ್ಣ ಕಲಿಯ ೧೦೦೧ ಅವತರಣಿಕೆಗಳು ಭಗವಾನ್ ಸರಹುನಾಥರ ಮೂಲಕ ಅಂತ್ಯಗೊಳ್ಳುತ್ತವೆ‌. ಬಳಿಕ ಪವಿತ್ರ ಸನಾಹಿ ಯುಗ ಆರಂಭಗೊಳ್ಳುತ್ತದೆ. ಸನಾಹಿ ಎಂದರೆ ಪವಿತ್ರ "ಸರಹುನಾಥ್ ಹಿಮಗಿರೀಸಮ್" ಎಂದು. ಹಿಮಗಿರೀಸಮ್ ಎಂದರೆ ಅದೊಂದು ದೇವತೆಗಳ ರಾಷ್ಟ್ರ. ಅದು ಸೈನೀಸಮ್ ನೂತನ ಧರ್ಮವನ್ನು ಹೋಲಿದೆ. ಸೈನೀಸಮ್ ಎಂದರೆ "ಸರಹುನಾಥ್ ಇಂಟರ್ನ್ಯಾಷನಲ್ ಗೌವರನೇಬಲ್" ಎಂದು. ಆ ಧರ್ಮವೂ 21 ಪವಿತ್ರ ಸನಾಹಿ ಗ್ರಂಥಗಳನ್ನು ಹೊಂದಿದೆ. ಹವೇರಿಯ ಪ್ರವಾಸಿ ಆಕರ್ಷಣೆಗಳು ಸಿದ್ಧೇಶ್ವರ ದೇವಸ್ಥಾನ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪದ ಬೆಳವಣಿಗೆಗಳ ಕೇಂದ್ರವು ಇಂದಿನ ಬಾಗಲ್ಕೋಟ್, ಗಡಾಗ್, ಕೊಪ್ಪಲ್, ಹವೇರಿ ಮತ್ತು ಧಾರವಾಡ ಜಿಲ್ಲೆಗಳು ಸೇರಿದಂತೆ ಪ್ರದೇಶವಾಗಿತ್ತು; ಹವೇರಿಯಲ್ಲಿರುವ ಸಿದ್ಧೇಶ್ವರ ದೇವಸ್ಥಾನವು 11 ನೇ ಶತಮಾನದ ದ್ರಾವಿಡ ಅಭಿವ್ಯಕ್ತಿ ಮತ್ತು ಸೂಪರ್‌ಸ್ಟ್ರಕ್ಚರ್‌ನೊಂದಿಗೆ ದಿಗ್ಭ್ರಮೆಗೊಂಡ ಚದರ ಯೋಜನೆ. ಹವೇರಿಯ ಸಿದ್ಧೇಶ್ವರ ದೇವಸ್ಥಾನದಲ್ಲಿ ಚಿಕಣಿ ಅಲಂಕಾರಿಕ ದ್ರಾವಿಡ ಮತ್ತು ನಗರಾ ಶೈಲಿಯ ಗೋಪುರಗಳು ಬಸವಣ್ಣ ದೇವಸ್ಥಾನ ಉತ್ಸವ ರಾಕ್ ಗಾರ್ಡನ್ ಎನ್ಎಚ್ -4 ಶಿಗ್ಗಾಂವ್ ತಾಲ್ಲೂಕಿನ ಗೋಟಗೋಡಿಯಲ್ಲಿ ಇದೆ. ಇದು ಆಧುನಿಕ ಮತ್ತು ಕಲೆ ಎರಡರಲ್ಲೂ ಸಂಯೋಜಿಸಲ್ಪಟ್ಟಿದೆ, ಅಲ್ಲಿ 1000 ಕ್ಕೂ ಹೆಚ್ಚು ನಿಜ ಜೀವನದ ಗಾತ್ರದ ಶಿಲ್ಪಗಳು ಇರುತ್ತವೆ. ಇದು 8 ವಿಶ್ವ ದಾಖಲೆಗಳನ್ನು ಪಡೆದಿದೆ. ಇದು ಇಡೀ ಜಗತ್ತಿನಲ್ಲಿ ಒಂದು ಅನನ್ಯ ಉದ್ಯಾನವಾಗಿದೆ. ಹಾವೇರಿ ಜಿಲ್ಲೆಯಲ್ಲಿ ಆಸಕ್ತಿಯ ಸ್ಥಳಗಳು ದೇವಾಲಯಗಳು ಹವೇರಿಯಲ್ಲಿರುವ ಸಿದ್ಧೇಶ್ವರ ದೇವಸ್ಥಾನ ಹಾನಗಲ್ ನ ಹುಲ್ಲತ್ತಿಯಲ್ಲಿ ಭಗವಾನ್ ಹರಿಹರ ಸರಹುನಾಥ್ ವಿಶ್ವ ಮಹಾಸಂಸ್ಥಾನ ಮಠ ಹಾನಗಲ್ ನ ಸುರಳೇಶ್ವರದಲ್ಲಿ ಭಗವಾನ್ ಹರಿಹರ ಸರಹುನಾಥ್ ಮಂದಿರ ಹಿರೇಕೆರೂರ್ ನ ಬಾಳಂಬೀಡದ ಭಗವಾನ್ ಹರಿಹರ ಸರಹುನಾಥ್ ಮಂದಿರ ಮಸೀದಿಗಳು / ಸೂಫಿ ಸ್ಥಳಗಳು ದರ್ಗಾ ಆಫ್ ಇರ್ಷಾದ್ ಅಲಿ ಬಾಬಾ, ಪಿಬಿ ರಸ್ತೆ, ಹವೇರಿ. ಹವೇರಿಯ ಭಾರತಿ ನಗರ, ಹಂಗಲ್ ರಸ್ತೆಯಲ್ಲಿರುವ ಸೇಂಟ್ ಆನ್ಸ್ ಚರ್ಚ್ ಮಿನಿ ವಿಧಾನ ಸೌಧ ಇತ್ತೀಚೆಗೆ ದೇವಗಿರಿ ಬೆಟ್ಟದಲ್ಲಿ ಮಿನಿ ವಿಧಾನ ಸೌಧವನ್ನು ನಿರ್ಮಿಸಲಾಯಿತು. ಮಿನಿ ವಿಧಾನ ಸೌಧ ಪ್ರಮುಖ ಸರ್ಕಾರಿ ಕಚೇರಿಗಳನ್ನು ಆಯೋಜಿಸುತ್ತದೆ. ಇವುಗಳಲ್ಲಿ ಮುಖ್ಯ ಕಚೇರಿ ಜಿಲ್ಲಾ ಆಯುಕ್ತರ ಕಚೇರಿ. ಹಾವೇರಿ ನಲ್ಲಿ ಇದೆ . ಇದು ಸರಾಸರಿ 572 ಎತ್ತರವನ್ನು ಹೊಂದಿದೆ   ಮೀಟರ್ (1876   ಅಡಿಗಳು). ಶಿಕ್ಷಣ ಸಂಸ್ಥೆಗಳು ಸ್ನಾತಕೋತ್ತರ ಶ್ರೀ ರಾಜೀವ್ ಗಾಂಧಿ ಕರ್ನಾಟಕ ವಿಶ್ವವಿದ್ಯಾಲಯ ಪಿಜಿ ಸೆಂಟರ್, ಕೆರಿಮಟ್ಟಿಹಳ್ಳಿ, ಹವೇರಿ ಅಭಿವೃದ್ಧಿ ಹೊಂದುತ್ತಿರುವ ಶಿಕ್ಷಣ ಸಂಸ್ಥೆ. ಹವೇರಿಯಲ್ಲಿ ಮೂರು ಪ್ರಮುಖ ಕಾಲೇಜುಗಳಿವೆ. ಒಂದು ಸರ್ಕಾರ. ಪ್ರಥಮ ದರ್ಜೆ ಕಾಲೇಜು, ಗುಡ್ಲೆಪ್ಪ ಹಲ್ಲಿಕೇರಿ ಕಾಲೇಜು, ಮತ್ತು ಸಿ.ಬಿ.ಕೊಲ್ಲಿ ಪಾಲಿಟೆಕ್ನಿಕ್. ಇತರ ಕಾಲೇಜುಗಳಲ್ಲಿ ಎಸ್‌ಎಸ್ ಮಹಿಳಾ ಪದವಿ ಕಾಲೇಜು, ಎಸ್‌ಜೆಎಂ ಪೂರ್ವ ವಿಶ್ವವಿದ್ಯಾಲಯ ಕಾಲೇಜು ಮತ್ತು ಎಸ್‌ಎಂಎಸ್ ಪೂರ್ವ ವಿಶ್ವವಿದ್ಯಾಲಯ ಕಾಲೇಜು ಸೇರಿವೆ. ಇತ್ತೀಚೆಗೆ ಸರ್ಕಾರ ಎಂಜಿನಿಯರಿಂಗ್ ಕಾಲೇಜು ಪ್ರಾರಂಭವಾಯಿತು. ಸಿಬಿಸಿಪೊಲಿಟೆಕ್ನಿಕ್ ಸಿಬಿಎಸ್‌ಇ ಶಾಲೆಗಳು ಕರ್ನಾಟಕ ಸಾರ್ವಜನಿಕ ಶಾಲೆ, ಹನಾಗಲ್ ರಸ್ತೆ, ಹವೇರಿ ಕೆಎಲ್ಇಯ ಇಂಗ್ಲಿಷ್ ಮಧ್ಯಮ ಸಿಬಿಎಸ್ಇ ಶಾಲೆ (www.klescbsehvr.org) ಕಾನ್ವೆಂಟ್ ಶಾಲೆಗಳು ಮೃತ್ಯುಂಜಯ ವಿದ್ಯಾ ಪೀಠ ಅವರ ಹೌನ್ಸಭವಿ. 1918 ರಿಂದ (ಕಾನ್ವೆಂಟ್‌ನಿಂದ ಪದವಿವರೆಗೆ ಟಾಪ್ 1 ಕಾಲೇಜ್ ಡಿಪ್ಲೊಮಾ) ಶ್ರೀ ವಿವೇಕಾನಂದ ಕಾನ್ವೆಂಟ್ ಶಾಲೆ ತುಮ್ಮಿನಕ್ಕತಿ ನ್ಯೂ ಕೇಂಬ್ರಿಡ್ಜ್ ಕಾನ್ವೆಂಟ್ ಶಾಲೆ ತುಮ್ಮಿನಕಟ್ಟಿ ಪ್ರೌ schools ಶಾಲೆಗಳು ದುರ್ಗಾಡ್ ಪ್ರೌ School ಶಾಲೆ ಹೌನ್‌ಸಭವಿ, ಮೃತ್ಯುಂಜಯ ವಿದ್ಯಾ ಪೀಠ ಅವರ ಹೌನ್‌ಸಭವಿ. 1918 ರಿಂದ (ಕಾನ್ವೆಂಟ್‌ನಿಂದ ಪದವಿವರೆಗೆ ಟಾಪ್ 1 ಕಾಲೇಜ್ ಡಿಪ್ಲೊಮಾ) ಕರ್ನಾಟಕ ಸಾರ್ವಜನಿಕ ಶಾಲೆ, ಹನಾಗಲ್ ರಸ್ತೆ, ಹವೇರಿ ಕೆಎಲ್ಇಯ ಇಂಗ್ಲಿಷ್ ಮಧ್ಯಮ ಸಿಬಿಎಸ್ಇ ಶಾಲೆ (www.klescbsehvr.org) ಗಾಂಧಿ ಗ್ರಾಮೀನಾ ಗುರುಕುಲ ಹೊಸರಿತಿ ಲಯನ್ಸ್ ಇಂಗ್ಲಿಷ್ ಮಧ್ಯಮ ಶಾಲೆ ಸೇಂಟ್ ಮೈಕೆಲ್ ಇಂಗ್ಲಿಷ್ ಮಧ್ಯಮ ಶಾಲೆ ಜೆಜಿಎಸ್ಎಸ್ ಪ್ರೌ School ಶಾಲೆ (ಗೆಲಿಯಾರಾ ಬಾಲಗಾ) ಜೆಪಿ ರೋಟರಿ ಶಾಲೆ ಹುಕ್ಕರಿಮಠ ಶಿವಬಸವೇಶ್ವರ ಪ್ರೌ School ಶಾಲೆ ಎಸ್‌ಎಂಎಸ್ ಬಾಲಕಿಯರ ಪ್ರೌ School ಶಾಲೆ ಎಚ್‌ಎಲ್‌ವಿ ಇಂಗ್ಲಿಷ್ ಮಧ್ಯಮ ಶಾಲೆ ಸವನೂರ್ ಮೃತ್ಯುಂಜಯ ಪ್ರೌ School ಶಾಲೆ ಕುರುಬಗೊಂಡ ಶ್ರೀ ಕಾಳಿದಾಸ ಪ್ರೌ School ಶಾಲೆ, ಕಾಗಿನೆಲೆ ಬಸ್ ನಿಲ್ದಾಣ, ಹವೇರಿ ಎಸ್‌ಜೆಎಂ ಪ್ರಾಥಮಿಕ ಮತ್ತು ಪ್ರೌ School ಶಾಲೆ, ಹವೇರಿ ಸೇಂಟ್ ಆನ್ಸ್ ಇಂಗ್ಲಿಷ್ ಮಧ್ಯಮ ಶಾಲೆ. ಹವೇರಿ ಎಸ್‌ವಿಎಸ್ ಪ್ರೌ school ಶಾಲೆ ಅಬಲೂರು ಶ್ರೀ ಸಂಗನಾ ಬಸವೇಶ್ವರ ಪ್ರೌ School ಶಾಲೆ, ತುಮ್ಮಿನಕಟ್ಟಿ ಸರ್ಕಾರಿ ಪ್ರೌ School ಶಾಲೆ ತುಮ್ಮಿನಕಟ್ಟಿ ಸರ್ಕಾರಿ ಪ್ರೌ School ಶಾಲೆ, ತುಮ್ಮಿನಕಟ್ಟಿ ಸರ್ ಎಂ ವಿಶ್ವೇಶ್ವರಯ್ಯ ಶಾಲೆ, ಹವೇರಿ ಕಾಲೇಜುಗಳು ಮತ್ತು ಸ್ಥಳಗಳು , ಎಂಎಎಸ್‌ಸಿ ಕಾಲೇಜು, ಗ್ರಾಮೀಣ ಪಾಲಿಟೆಕ್ನಿಕ್ ಡಿಪ್ಲೊಮಾ, ಮೃತ್ಯುಂಜಯ ವಿದ್ಯಾ ಪೀಠ ಅವರ ಹೌನ್‌ಸಭವಿ. 1918 ರಿಂದ (ಕಾನ್ವೆಂಟ್‌ನಿಂದ ಪದವಿವರೆಗೆ ಟಾಪ್ 1 ಕಾಲೇಜು ಡಿಪ್ಲೊಮಾ) ಗುಡ್ಲೆಪ್ಪ ಹಲ್ಲಿಕೇರಿ ಕಾಲೇಜು (ಜಿಎಚ್ ಕಾಲೇಜು ಎಂದು ಜನಪ್ರಿಯವಾಗಿ ಕರೆಯಲ್ಪಡುತ್ತದೆ) (ವಿಜ್ಞಾನ, ವಾಣಿಜ್ಯ ಮತ್ತು ಕಲೆ) ಪರಿವರ್ತನ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಸಿಬಿ ಕೊಲ್ಲಿ ಪಾಲಿಟೆಕ್ನಿಕ್ (ಸಿಎಸ್, ಇ & ಸಿ, ಮೆಕ್, ಸಿವಿಲ್ ಮತ್ತು ಐಎಸ್) ಸರ್ಕಾರ ಎಂಜಿ. ಕಾಲೇಜು (ಸಿಎಸ್, ಇ & ಸಿ, ಮೆಕ್ ಮತ್ತು ಸಿವಿಲ್) ಸರ್ಕಾರ ಮಜೀದ್ ಕಾಲೇಜು ಸವನೂರ್ ಎಸ್‌ಜೆಎಂ ಪಿಯು ಕಾಲೇಜು, ಹವೇರಿ (ವಿಜ್ಞಾನ, ವಾಣಿಜ್ಯ ಮತ್ತು ಕಲೆ) ತುಮ್ಮಿನಕತ್ತಿಯ ಶ್ರೀ ಸಂಗನಾ ಬಸವೇಶ್ವರ ಪಿ.ಯು ಕಾಲೇಜು ಶ್ರೀ ಹುಕ್ಕರಿಮಾತಾ ಶಿವಬಸವೇಶ್ವರ ಪ್ರೌ School ಶಾಲೆ ಹವೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹವೇರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಹವೇರಿ ಲಯನ್ಸ್ ಇಂಗ್ಲಿಷ್ ಬಾಲಕಿಯರ ವಾಣಿಜ್ಯ ಕಾಲೇಜು, ಹವೇರಿ ಸ್ವಾಮಿ ವಿವೇಕಾನಂದ ಪಿಯು ಕಾಲೇಜು ಹವೇರಿ ಕಾಲೇಜ್ ಆಫ್ ಹಾರ್ಟಿಕಲ್ಚರಲ್ ಎಂಜಿನಿಯರಿಂಗ್ ಮತ್ತು ಫುಡ್ ಟೆಕ್ನಾಲಜಿ, ದೇವಿಹೋಸೂರ್, ಹವೇರಿ ಜನಸಂಖ್ಯಾಶಾಸ್ತ್ರ 2011 ರ ಜನಗಣತಿಯ ಪ್ರಕಾರ, ಭಾರತ ಜನಗಣತಿಯ ಪ್ರಕಾರ, ಹಾವೇರಿಯಲ್ಲಿ 67102 ಜನಸಂಖ್ಯೆ ಇತ್ತು. ಪುರುಷರು ಜನಸಂಖ್ಯೆಯ 51% ಮತ್ತು ಮಹಿಳೆಯರು 49%. ಹವೇರಿಯ ಸರಾಸರಿ ಸಾಕ್ಷರತಾ ಪ್ರಮಾಣ 70%, ರಾಷ್ಟ್ರೀಯ ಸರಾಸರಿ 59.5% ಗಿಂತ ಹೆಚ್ಚಾಗಿದೆ: ಪುರುಷರ ಸಾಕ್ಷರತೆ 76%, ಮತ್ತು ಸ್ತ್ರೀ ಸಾಕ್ಷರತೆ 64%. ಹವೇರಿಯಲ್ಲಿ, 13% ಜನಸಂಖ್ಯೆಯು 6 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಸಹ ನೋಡಿ ಉಲ್ಲೇಖಗಳು Pages with unreviewed translations
1075
https://kn.wikipedia.org/wiki/%E0%B2%95%E0%B3%8A%E0%B2%AA%E0%B3%8D%E0%B2%AA%E0%B2%B3
ಕೊಪ್ಪಳ
ಕೊಪ್ಪಳ ಜಿಲ್ಲೆ ೧-೪-೧೯೯೮ ರಂದು ಆರಂಭವಾದ ಕರ್ನಾಟಕ ರಾಜ್ಯದ ಹೊಸ ಜಿಲ್ಲೆಗಳಲ್ಲಿ ಒಂದಾಗಿದೆ. ೭೧೯೦ ಚ.ಕಿಮಿ ವಿಸ್ತೀರ್ಣ ಮತ್ತು ೨೦೧೧ ರ ಜನಗಣತಿಯ ಪ್ರಕಾರ ೧೩.೮೯ ಲಕ್ಷ ಜನಸಂಖ್ಯೆ ಕೊಪ್ಪಳ ಜಿಲ್ಲೆ ಹೊಂದಿರುತ್ತದೆ. ಗಂಗಾವತಿ, ಕೊಪ್ಪಳ,ಯಲಬುರ್ಗಾ, ಕುಷ್ಟಗಿ ಮತ್ತು ೨೦೧೭ರಲ್ಲಿ ಹೊಸದಾಗಿ ಘೋಷಣೆಯಾದ ಕುಕನೂರು, ಕನಕಗಿರಿ ಹಾಗು ಕಾರಟಗಿ ಈ ಜಿಲ್ಲೆಯಲ್ಲಿರುವ ತಾಲೂಕುಗಳು. ಐತಿಹಾಸಿಕವಾಗಿ, ಸಾಂಸ್ಕ್ರತಿಕವಾಗಿ ಕೊಪ್ಪಳ ಪ್ರಸಿದ್ಧವಾಗಿದೆ. ಕೊಪ್ಪಳವು ಕರ್ನಾಟಕ ರಾಜ್ಯದ ಈಶಾನ್ಯ ಭಾಗದಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ನಡುವಿನ ಪ್ರದೇಶದಲ್ಲಿದೆ. ಹಿಂದಿನ ರಾಯಚೂರು ಜಿಲ್ಲೆಯನ್ನು ವಿಭಜಿಸಿ 1997ರಲ್ಲಿ ಹೊಸ ಜಿಲ್ಲೆ ಕೊಪ್ಪಳವನ್ನು ರಚಿಸಲಾಯಿತು. ಜಿಲ್ಲೆಯಲ್ಲಿ ೨೦ ಹೋಬಳಿಗಳು, ೬೧೮ ಗ್ರಾಮಗಳಿವೆ. ಈ ಜಿಲ್ಲೆಯನ್ನು ಉತ್ತರದಲ್ಲಿ ಬಾಗಲಕೋಟೆ ಮತ್ತು ರಾಯಚೂರು, ಪೂರ್ವದಲ್ಲಿ ರಾಯಚೂರು ಮತ್ತು ಬಳ್ಳಾರಿ, ದಕ್ಷಿಣದಲ್ಲಿ ಬಳ್ಳಾರಿ ಹಾಗೂ ಪಶ್ಚಿಮದಲ್ಲಿ ಗದಗ ಜಿಲ್ಲೆಗಳು ಸುತ್ತುವರಿದಿವೆ. ವಿಸ್ತೀರ್ಣ, ೫೫೭೦ ಚ ಕಿಮೀ.. ಕರ್ನಾಟಕದ ರಾಜ್ಯದ 31 ಜಿಲ್ಲೆಗಳಲ್ಲಿ ಕೊಪ್ಪಳ ಜಿಲ್ಲೆ ಒಂದಾಗಿದ್ದು ಈ ಜಿಲ್ಲೆಯು ದಕ್ಷಿಣ ಭಾರತದ ಕುಂಭ ಮೇಳ ಎಂದು ಹೆಸರಾಯಿತು ಏಕೆಂದರೆ ಈ ಜಿಲ್ಲೆಯಲ್ಲಿ ಶ್ರೀ ಗವಸಿದ್ಧೇಶ್ವರ ಮಠ ಇದು ಅತ್ಯಂತ ಹೆಚ್ಚು ಕಾಲ ಪ್ರಶಿದ್ದ ಪಡೆದಿತ್ತು ಆದ್ದರಿಂದ ಇದು ಪ್ರತಿವರ್ಷ ಸಾವಿರಾರು ಮಂದಿ ಜಾತ್ರೆ ಸಂದರ್ಭದಲ್ಲಿ ಸೇರಿರುತ್ತಾರೆ ಎಂದು ಹೇಳಬಹುದು ಭೌಗೋಳಿಕ ಮಾಹಿತಿ ಈ ಜಿಲ್ಲೆ ದಖನ್ನಿನ ಕಣಿವೆ ಭಾಗದ್ದಲ್ಲಿದ್ದು ಸಮುದ್ರ ಮಟ್ಟಕ್ಕೆ ಹೆಚ್ಚು ಎತ್ತರವಲ್ಲದ ಭೂಪ್ರದೇಶದಿಂದ ಕೂಡಿದೆ. ಇದರಿಂದಾಗಿ ಇಲ್ಲಿ ಯಾವ ಪ್ರಮುಖ ಬೆಟ್ಟಸಾಲುಗಳೂ ಕಂಡುಬರುವುದಿಲ್ಲ. ಅಲ್ಲಲ್ಲಿ ಪಶ್ಚಿಮ ಅಥವಾ ಪೂರ್ವ ಘಟ್ಟಸಾಲಿಗೆ ಸೇರದ ಹೆಚ್ಚು ಎತ್ತರವಲ್ಲದ ಗುಡ್ಡಗಳಿವೆ. ಕುಷ್ಟಗಿ ತಾಲ್ಲೂಕಿನಲ್ಲಿ ಕಂಡುಬರುವ ಬಾದಾಮಿ ಬೆಟ್ಟಗಳ ಶ್ರೇಣಿಗೆ ಸೇರಿದ ಸಾಲೊಂದು ಗಂಗಾವತಿ ತಾಲ್ಲೂಕಿನಲ್ಲಿ ಮುಂದುವರಿಯುತ್ತದೆ. ಕುಷ್ಟಗಿಯಿಂದ 32ಕಿಮೀ ದೂರದಲ್ಲಿರುವ ಜಗದ ಗುಡ್ಡ (736ಮೀ.), ಗಂಗಾವತಿ ತಾಲ್ಲೂಕಿನ ಎಮ್ಮೆಗುಡ್ಡ (821ಮೀ.), ಕನಕಗಿರಿಗೆ ಈಶಾನ್ಯದಲ್ಲಿರುವ ನಿಶಾನಿಗುಡ್ಡ (580ಮೀ.), ಮಾರಿಗುಡ್ಡ (597ಮೀ.), ಇವು ಈ ಜಿಲ್ಲೆಯ ಎತ್ತರದ ಬೆಟ್ಟಗಳು. ಈ ಜಿಲ್ಲೆಯಲ್ಲಿ ಮಳೆ ಕಡಿಮೆ. ಹಾಗಾಗಿ ಸಸ್ಯ ಸಂಪತ್ತೂ ಕಡಿಮೆ. ಕಡಿದಾದ ಮತ್ತು ವಿವಿಧ ಆಕಾರದ ಬಂಡೆಗಳಿಂದ ಆವೃತವಾದ ಪರಿಸರವನ್ನು, ಬಯಲು ಭೂದೃಶ್ಯಗಳನ್ನು ಕಾಣುತ್ತೇವೆ. ಇಲ್ಲಿನ ಬೆಟ್ಟಗಳು ಪ್ರಾಕೃತಿಕವಾಗಿ ರೂಪಾಂತರ ಹೊಂದಿದ ಪ್ರಾಚೀನ ಶಿಲಾಯುಗಕ್ಕೆ ಸೇರಿದವು. ಅಲ್ಲಲ್ಲಿ ಗ್ರಾನೈಟ್ ಕಲ್ಲಿನ ಬೆಟ್ಟಗಳು ಕಾಣುತ್ತವೆ; ಉಳಿದಂತೆ ಸಮತಟ್ಟಾದ ಬಯಲು ಪ್ರದೇಶ. ಈ ಶಿಲಾ ಪದರದಲ್ಲಿ ನೈಸ್ ಶಿಲೆಗಳು, ಪದರಗಲ್ಲು ಶಿಲೆಗಳು, ಬೆಣಚುಕಲ್ಲುಗಳು ಇವೆ. ಮುಖ್ಯವಾಗಿ ಕೇಂಬ್ರಿಯನ್ ಯುಗಪೂರ್ವದ ರೂಪ ಪರಿವರ್ತನಾ ಪದರಗಲ್ಲುಗಳು ಮತ್ತು ಗ್ರಾನೈಟ್ ಬೆಣಚುಗಲ್ಲು ಬಹುಪಾಲು ಶಿಲೆಗಳು ಧಾರವಾಡ ಶಿಲಾವರ್ಗಕ್ಕೆ ಸೇರಿದವು. ಪರ್ಯಾಯ ದ್ವೀಪ ಸಂಬಂಧವಾದ ಡೈಕ್ ಮಾದರಿಯ ಶಿಲೆಗಳೂ ಕಂಡುಬರುತ್ತವೆ. ಕಲಾದಗಿ ಶ್ರೇಣಿಗೆ ಸೇರಿದ ಕೆಲವು ಶಿಲೆಗಳು ಕುಷ್ಟಗಿ ಸಮೀಪ ಇವೆ. ಇಲ್ಲಿ ಪೆಂಟೆ ಶಿಲೆ ಮತ್ತು ಪುರಳು ಶಿಲೆಯ ಪದರಗಳನ್ನು ಕಾಣಬಹುದು. ಕಣಶಿಲೆಯ ಗುಡ್ಡಗಳು, ಟ್ರ್ಯಾಪ್ ಶಿಲೆಯ ಉಬ್ಬುಗಳು ಗಂಗಾವತಿ ತಾಲ್ಲೂಕಿನಲ್ಲಿವೆ. ಜಿಲ್ಲೆಯಲ್ಲಿ ಕಬ್ಬಿಣ, ತಾಮ್ರ, ಸೀಸದ ಅದುರು, ಅಭ್ರಕ, ಸ್ಫಟಿಕ ಶಿಲೆ ಮುಂತಾದ ಖನಿಜಗಳಿವೆ. ಸಮೀಪದ ರಾಯಚೂರು ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪಗಳಿವೆ. ಜಂಬುಮಣ್ಣು ಮತ್ತು ಕಾವಿಮಣ್ಣಿನ ಭೂಮಿ ಉಪಯುಕ್ತವಾಗಿದೆ. ಕೊಪ್ಪಳ ತಾಲ್ಲೂಕಿನ ಬಹುಭಾಗ ಕಪ್ಪುಮೆಕ್ಕಲು ಮಣ್ಣಿನಿಂದ ಕೂಡಿದ್ದು ಫಲವತ್ತಾಗಿದೆ. ಕಪ್ಪುಮಿಶ್ರಿತ ಕೆಂಪುಮಣ್ಣು ಅಲ್ಲಲ್ಲಿ ಕಂಡುಬರುತ್ತದೆ. ಮರಳು ಮಿಶ್ರಿತ ಕಪ್ಪುಮಣ್ಣು ಅನೇಕ ಕಡೆಗಳಲ್ಲಿ ಹರಡಿದೆ.ಈ ಜಿಲ್ಲೆಯಲ್ಲಿ ಮಳೆ ಕಡಿಮೆ ಬಿದ್ದರೂ ತುಂಗಭದ್ರಾ ಮತ್ತು ಕೃಷ್ಣಾ ನದಿಗಳು ಎರಡೂ ಪಾಶ್ರ್ವಗಳಲ್ಲಿ ಹರಿಯುವುದರಿಂದ ಜಲ ಸಂಪನ್ಮೂಲ ಉತ್ತಮವಾಗಿದೆ. ತುಂಗಭದ್ರಾ ನದಿ ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ಸರಹದ್ದಾಗಿ ಕ್ರಮಿಸುತ್ತದೆ. ಜಿಲ್ಲೆಯ ಸರಾಸರಿ ಮಳೆ 595ಮಿಮೀ. ಜಿಲ್ಲೆಯಲ್ಲಿ ಹುಟ್ಟಿ ಹರಿಯುವ ತೊರೆಗಳಲ್ಲಿ ನೀರಿನ ಪ್ರಮಾಣ ಕಡಿಮೆ. ಯಲಬುರ್ಗ ತಾಲ್ಲೂಕಿನಲ್ಲಿ ಹುಟ್ಟುವ ಒಂದು ತೊರೆ ಕೊಪ್ಪಳದ ಸಮೀಪ ಹರಿದು ತುಂಗಭದ್ರಾ ಜಲಾಶಯದ ಹಿನ್ನೀರನ್ನು ಸೇರುತ್ತದೆ. ಕುಷ್ಟಗಿ ತಾಲ್ಲೂಕಿನ ಉಪ್ಪಲದೊಡ್ಡಿ ಬಳಿ ಹುಟ್ಟುವ ಕನಕಗಿರಿ ನಾಲಾ ಗಂಗಾವತಿ ತಾಲ್ಲೂಕನ್ನು ಪ್ರವೇಶಿಸಿ ತುಂಗಭದ್ರಾ ನದಿಯನ್ನು ಸೇರುತ್ತದೆ. ತಾವರಗೆರೆ ಬಳಿ ಹುಟ್ಟುವ ಸಿದ್ಧಾಪುರ ನಾಲೆ ಕುಂಟೋಜಿ ಬಳಿ ತುಂಗಭದ್ರಾ ನದಿಯನ್ನು ಸೇರುತ್ತದೆ. ಇನ್ನು ಅನೇಕ ಚಿಕ್ಕ ಪುಟ್ಟ ತೊರೆಗಳು ಆಗ್ನೇಯಾಬಿsಮುಖವಾಗಿ ಹರಿದು ತುಂಗಭದ್ರಾ ನದಿ ಸೇರುತ್ತವೆ. ತೊರೆ ಮತ್ತು ನಾಲಾಗಳ ಮೂಲಕ ಮಳೆಗಾಲದಲ್ಲಿ ನೀರು ಹರಿದರೂ ಬೇಸಗೆಯಲ್ಲಿ ಹೆಚ್ಚಿನವು ಬತ್ತಿಹೋಗುತ್ತವೆ ಜಿಲ್ಲೆಯ ಅತಿ ಉಷ್ಣ ಹವಾಮಾನ ಹಾಗೂ ವಾತಾವರಣದಲ್ಲಿನ ಕಡಿಮೆ ತೇವಾಂಶ ಸಸ್ಯಗಳ ಬೆಳೆವಣಿಗೆಗೆ ಸಹಾಯಕವಾಗಿಲ್ಲ. ಅಲ್ಲಲ್ಲಿ ಗುಡ್ಡಗಳ ಇಳಿಜಾರಿನಲ್ಲಿ ಪೆÇದೆ ಕಾಡುಗಳು ಕಂಡುಬರುತ್ತವೆ. ಕುಷ್ಟಗಿ ತಾಲ್ಲೂಕಿನಲ್ಲಿ ಅರಣ್ಯ ಪ್ರದೇಶ ಇತರೆಡೆಗಿಂತ ಹೆಚ್ಚಿದೆ. ಜಿಲ್ಲೆಯ ಅರಣ್ಯ ಪ್ರದೇಶದ ವಿಸ್ತೀರ್ಣ 29451 ಹೆಕ್ಟೇರುಗಳು. ಇಲ್ಲಿನ ಕಾಡುಗಳಲ್ಲಿ ಜಾಲ, ಹುಣಿಸೆ, ಹೊಂಗೆ, ಹಾಲೆ, ಮುತ್ತುಗ, ದಿಂಡಿಗ, ಚುಜ್ಜಲು, ಹುರಗಲು, ಹೊನ್ನೆ, ಕಮ್ಮಾರ, ನಲ್ಲಮಡ್ಡಿ, ಬಿಲ್ವ, ಬಾಗೆ, ಕಕ್ಕೆ, ಸೀತಾಫಲ ಮುಂತಾದ ಗಿಡಮರಗಳಿವೆ. ಅಲ್ಲಲ್ಲಿ ಮುಳ್ಳುಗಿಡಗಳ ಕುರುಚಲು ಕಾಡುಗಳಿವೆ. ಭೂಸವಕಳಿಯನ್ನು ತಡೆಯಲು ನೆಡುತೋಪುಗಳನ್ನು ಬೆಳೆಸಲಾಗಿದೆ. ಕಾಡುಗಳ ಕೊರತೆಯಿಂದ ಪ್ರಾಣಿಪಕ್ಷಿಗಳ ಸಂಖ್ಯೆಯೂ ಕಡಿಮೆ. ಚಿರತೆ, ತೋಳ, ಕತ್ತೆಕಿರುಬ, ನರಿ, ಕಪಿ ಮತ್ತು ಜಿಂಕೆಗಳು ಅಲ್ಲಲ್ಲಿ ಕಂಡುಬರುತ್ತವೆ. ಹಾವುಗಳ ಸಂತತಿ ಹೆಚ್ಚು. ಚೇಳು, ಹಲ್ಲಿ, ನೀರಹಾವು, ಮಣ್ಣುಮುಕ್ಕ, ನಾಗರಹಾವು ಎಲ್ಲೆಡೆಯೂ ಇವೆ. ಬಾತು, ನೀರಕೋಳಿ, ಕಾಗೆ, ಗಾಜುಗ ಮುಖ್ಯವಾದ ಪಕ್ಷಿಗಳು. ಹಸು, ಎಮ್ಮೆ, ಕುರಿ, ಮೇಕೆ, ಕುದುರೆ ಮತ್ತು ಕೋಳಿ ಮುಖ್ಯ ಸಾಕುಪ್ರಾಣಿಗಳು ಹವಾಮಾನ ವರ್ಷದ ಬಹುಭಾಗ ಉಷ್ಣಾಂಶದಿಂದ ಕೂಡಿರುತ್ತದೆ.ಮಳೆ ಕೆಲವು ವರ್ಷಗಳಲ್ಲಿ ಕಡಿಮೆ ಇದ್ದು ಕೆಲವೊಮ್ಮೆ ಹೆಚ್ಚು ಮಳೆ ಆಗುವುದುಂಟು. 2000 ಇಸವಿಯ ಮಳೆಗಾಲದಲ್ಲಿ 701ಮಿಮೀ. ಮಳೆಯಾಗಿತ್ತು. ವರ್ಷದಲ್ಲಿ 41 ಮಳೆ ದಿನಗಳೆಂದು ಗುರುತಿಸಲಾಗಿದೆ. ಮುಂಗಾರಿನಲ್ಲಿ ವರ್ಷದ ಹೆಚ್ಚಿನ ಭಾಗ ಮಳೆಯಾದರೂ ಹಿಂಗಾರಿನಲ್ಲಿ ಚಂಡಮಾರುತದ ಮಳೆ ಬಿರುಸಿನಿಂದ ದೊಡ್ಡ ಪ್ರಮಾಣದಲ್ಲಿ ಬೀಳುತ್ತದೆ. ಉಷ್ಣಾಂಶ ಅದಿsಕವಿರುವ ಭಾಗದಲ್ಲಿರುವ ಈ ಜಿಲ್ಲೆಯ ಕೆಲವೆಡೆ ಗರಿಷವಿ ಉಷ್ಣಾಂಶ 400ಸೆ.ಇರುವುದೂ ಉಂಟು. ಹಿಂದಿನ ಜಿಲ್ಲಾ ಕೇಂದ್ರ ರಾಯಚೂರಿನಲ್ಲಿ 450ಸೆ.ವರೆಗೂ ಉಷ್ಣಾಂಶ ಏರುವುದನ್ನು ಸ್ಮರಿಸಬಹುದು. ರಾತ್ರಿವೇಳೆ ಉಷ್ಣಾಂಶ ಬೇಗ ಕಡಿಮೆ ಆಗುತ್ತದೆ. ಡಿಸೆಂಬರ್‍ನಲ್ಲಿ ಗರಿಷವಿ ಉಷ್ಣಾಂಶ 29.30ಸೆ. ಇದ್ದರೆ ಕನಿಷವಿ ಉಷ್ಣಾಂಶ 17.70 ಸೆ.ಗೆ ಇಳಿಯುತ್ತದೆ. ನವೆಂಬರ್‍ನಿಂದ ಮೇವರೆಗೆ ಒಣ ಹವೆ ಇರುವುದು. ವ್ಯವಸಾಯ: ಕೊಪ್ಪಳ ಜಿಲ್ಲೆ ವ್ಯವಸಾಯ ಪ್ರಧಾನವಾದುದು. ಜಿಲ್ಲೆಯ ಸೇ.75 ರಷ್ಟು ಜನರು ವ್ಯವಸಾಯ ಮತ್ತು ಆ ಸಂಬಂಧವಾದ ಕಸಬುಗಳನ್ನು ಅವಲಂಬಿಸಿದ್ದಾರೆ. ಮಳೆ ಕಡಿಮೆ ಪ್ರಮಾಣದಲ್ಲಿ ಬೀಳುವುದರಿಂದ ಸಾಗುವಳಿಗಾರರ ಬದುಕು ಅನಿಶ್ಚಿತ ಆದಾಯವನ್ನು ಆಧರಿಸಿದೆ. ಹಿಂದಿನ ವಿಜಯನಗರ ಕಾಲದ ನಾಲೆಗಳು ಸ್ಥಳೀಯವಾಗಿ ಸೀಮಿತ ಪ್ರದೇಶಗಳಿಗೆ ನೀರೊದಗಿಸುತ್ತಿದ್ದವು. ಸುದೈವವಶಾತ್ ಈ ಜಿಲ್ಲೆಯು ರಾಜ್ಯದ ಪ್ರಮುಖ ನದಿಗಳಾದ ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ದೋಆಬ್ ಪ್ರದೇಶದಲ್ಲಿ ಬರುವುದರಿಂದ ನೀರಾವರಿ ಯೋಜನೆಗಳಿಂದ ಜಿಲ್ಲೆ ಹೆಚ್ಚು ಪ್ರಯೋಜನ ಪಡೆದಿದೆ. ಕೃಷಿ, ಪಶುಸಾಕಾಣಿಕೆ, ಮೀನುಗಾರಿಕೆ ಹೈದರಬಾದ್ ಸಂಸ್ಥಾನದ ಆಡಳಿತದಲ್ಲಿದ್ದಾಗ ತುಂಗಭದ್ರಾ ನದಿಯ ಅಣೆಕಟ್ಟು ಯೋಜನೆಗಳನ್ನು ಕಾರ್ಯಗತಗೊಳಿಸಲು ವಿವಿಧ ಪ್ರಯತ್ನಗಳು ನಡೆದವು. ಆಗಿನ ಮೈಸೂರು ಸಂಸ್ಥಾನ ಮತ್ತು ಮದರಾಸು ಪ್ರಾಂತಗಳು ಈ ಸರಹದ್ದಿನಲ್ಲಿ ಬರುತ್ತಿದ್ದುದರಿಂದ ಅವುಗಳೊಂದಿಗೆ ಸಮಾಲೋಚನೆ ಮತ್ತು ಒಪ್ಪಂದಗಳ ಅಂಗೀಕಾರದಲ್ಲೇ ಸಾಕಷ್ಟು ಕಾಲ ಕಳೆಯಿತು. ಸ್ವಾತಂತ್ರ್ಯ ಬಂದ ಮೇಲೆ 1950ರ ದಶಕದಲ್ಲಿ ತುಂಗಭದ್ರಾ ನದಿಗೆ ಹೊಸಪೇಟೆ ಬಳಿ ಬೃಹತ್ ಜಲಾಶಯ ನಿರ್ಮಿಸುವ ಕಾರ್ಯಯೋಜನೆ ತ್ವರಿತಗೊಂಡಿತು. ಇದು 1968ರ ಹೊತ್ತಿಗೆ ಪೂರ್ಣಗೊಂಡು ಕೊಪ್ಪಳವನ್ನು ಒಳಗೊಂಡಂತೆ ಹಿಂದಿನ ರಾಯಚೂರು ಜಿಲ್ಲೆಯ - ಈ ಜಲಾಶಯದ ಎಡದಂಡೆ ಕಾಲುವೆ ಮೂಲಕ ಹೆಚ್ಚು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ದೊರೆಯಿತು. ಈಗಿನ ಕೊಪ್ಪಳ ಜಿಲ್ಲೆಯ ಕೊಪ್ಪಳ, ಗಂಗಾವತಿ ತಾಲ್ಲೂಕುಗಳಲ್ಲಿ ನೀರಾವರಿ ಪ್ರದೇಶ ಹೆಚ್ಚಿತು. ಇದಲ್ಲದೆ ಹಳೆಯ ನಾಲಾಗಳು, ಸಣ್ಣ ಪ್ರಮಾಣದ ಅಣೆಕಟ್ಟುಗಳು ಅಥವಾ ಬ್ಯಾರೇಜ್‍ಗಳು ನಿರ್ಮಾಣವಾಗಿದ್ದು ಇವು ಬೇಸಗೆಯ ಬೆಳೆಗಳಿಗೆ ಆಶ್ರಯವಾಗಿವೆ. ಹಾಲಿ ಜಿಲ್ಲೆಯಲ್ಲಿ ಕಾಲುವೆಗಳಿಂದ 63,411 ಹೆಕ್ಟೇರ್, ಕೆರೆಗಳಿಂದ 1763 ಹೆಕ್ಟೇರ್ ಬಾವಿಗಳಿಂದ, 20,262 ಹೆಕ್ಟೇರ್ ಮತ್ತು ಕೊಳವೆ ಬಾವಿಗಳಿಂದ 6363 ಹೆಕ್ಟೆರ್ ಜಮೀನಿಗೆ ನೀರೊದಗುತ್ತಿದೆ. ಬತ್ತ, ಜೋಳ, ಸಜ್ಜೆ, ಹುರುಳಿ, ಹೆಸರು, ಮುಸುಕಿನ ಜೋಳ, ಕಡಲೆ, ಎಳ್ಳು, ದ್ವಿದಳ ಧಾನ್ಯಗಳು, ಸೂರ್ಯಕಾಂತಿ, ಸೋಯಾಬೀನ್, ಹತ್ತಿ, ತೊಗರಿ, ಹರಳುಬೀಜ, ನೆಲಗಡಲೆ, ಅಗಸೆ ಇವು ಮುಖ್ಯ ಬೆಳೆಗಳಾಗಿವೆ. ತೋಟಗಾರಿಕೆ ಬೆಳೆಗಳಲ್ಲಿ ಮಾವು, ಸಪೋಟ, ಸೀಬೆ, ಬಾಳೆ, ನಿಂಬೆ, ದಾಳಿಂಬೆ, ಅಂಜೂರ ಮೊದಲಾದವು ಪ್ರಮುಖವಾದವು. ಪಶುಸಂಗೋಪನೆ ಕೃಷಿಯೊಂದಿಗೆ ಜಿಲ್ಲೆಯ ಮುಖ್ಯ ಉಪಕಸಬುಗಳಲ್ಲಿ ಒಂದಾಗಿದೆ. ಇಲ್ಲಿ ಖಿಲಾರ್ ತಳಿಯ ಜಾನುವಾರುಗಳು ಹೆಚ್ಚು. ಅದಿsಕ ಹಾಲು ಉತ್ಪಾದನೆಯ ದೃಷ್ಟಿಯಿಂದ ಮಿಶ್ರತಳಿಗಳನ್ನು ಅಬಿsವೃದ್ಧಿಪಡಿಸಲಾಗಿದೆ. ಜಾನುವಾರು ಮತ್ತು ಕುರಿಗಳ ತಳಿ ಅಬಿsವೃದ್ಧಿಗಾಗಿ ವಿವಿಧ ಫಾರಂಗಳನ್ನು ಸ್ಥಾಪಿಸಿದೆ. 1953ರಲ್ಲಿ ಕೊಪ್ಪಳ ತಾಲ್ಲೂಕಿನ ಮುನಿರಾಬಾದಿನಲ್ಲಿ ಸ್ಥಾಪಿಸಲಾದ ಫಾರಂ ಅವುಗಳಲ್ಲಿ ಪ್ರಮುಖವಾದುದು. ಇಲ್ಲಿ ಆಂಧ್ರ ಮತ್ತು ವಿದೇಶಗಳಿಂದ ತಂದ ತಳಿಗಳೊಂದಿಗೆ ಸ್ಥಳೀಯ ತಳಿಗಳ ಸಂಕರ ಮಾಡುವ ಮೂಲಕ ಹೊಸ ತಳಿಗಳನ್ನು ಬೆಳೆಸಲಾಗುತ್ತಿದೆ. ಕೋಳಿಗಳ ತಳಿ ಅಬಿsವೃದ್ಧಿಗೆ ಸಹ ಇಲ್ಲಿ ಒಂದು ಕೇಂದ್ರವಿದೆ. ಗಂಗಾವತಿಯಲ್ಲಿ ಪ್ರಾದೇಶಿಕ ಕೋಳಿ ಸಾಕಣೆ ಫಾರಂ ಇದೆ. ಆಗಾಗ ಬರಗಾಲಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ಜಾನುವಾರುಗಳ ಸಂರಕ್ಷಣೆಗಾಗಿ ಗೋಶಾಲೆಗಳಿವೆ. ಮೇವು ಬೆಳೆಸುವ ಫಾರಂಗಳಿವೆ. 1998-99ರ ಅಂಕಿಅಂಶಗಳ ಮೇರೆಗೆ 249,976 ಸ್ಥಳೀಯ ಜಾನುವಾರುಗಳು; 2,165 ವಿದೇಶಿ ತಳಿಯ ಹಸುಗಳು, 8037 ಮಿಶ್ರತಳಿ ಹಸುಗಳು, 90078, ಎಮ್ಮೆಗಳೂ 191912 ಕುರಿಗಳು, 136671 ಮೇಕೆಗಳು ಜಿಲ್ಲೆಯಲ್ಲಿದ್ದವು. ಸಾಕು ಪ್ರಾಣಿಗಳ ಕ್ಷೇಮಾಬಿsವೃದ್ಧಿಗೆ ಪಶುಸಂಗೋಪನ ಇಲಾಖೆಯ ಆಸ್ಪತ್ರೆಗಳು, ಚಿಕಿತ್ಸಾಲಯಗಳು ಇವೆ. ಜಿಲ್ಲೆಯಲ್ಲಿ 9 ಪಶುವೈದ್ಯ ಆಸ್ಪತ್ರೆಗಳು, 11 ಚಿಕಿತ್ಸಾಲಯಗಳು, 59 ಪ್ರಾಥಮಿಕ ಪಶುವೈದ್ಯಕೇಂದ್ರಗಳು, 5 ಸಂಚಾರಿ ಚಿಕಿತ್ಸಾಲಯಗಳು, 12 ಕೃತಕ ಗರ್ಭಧಾರಣಾ ಕೇಂದ್ರಗಳಿವೆ. ಸಾಕಷ್ಟು ಜಲಾಶಯಗಳು ಮತ್ತು ಕೆರೆಕಟ್ಟೆಗಳಿಂದ ಕೂಡಿರುವ ಈ ಜಿಲ್ಲೆಯಲ್ಲಿ ಮೀನುಗಾರಿಕೆ ಸಹ ಬೆಳೆದಿದೆ. 2000-01ರಲ್ಲಿ 3,324 ಮೆಟ್ರಿಕ್‍ಟನ್ ಮೀನನ್ನು ಹಿಡಿಯಲಾಗಿತ್ತು. ಮುನಿರಾಬಾದಿನಲ್ಲಿ ಮೀನು ಸಾಕಣೆ ಅಬಿsವೃದ್ಧಿ ಫಾರಂ ಇದೆ. ಕೃಷಿ ಪ್ರದೇಶದ ಸರ್ವತೋಬಿsಮುಖ ಅಬಿsವೃದ್ಧಿಗಾಗಿ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವನ್ನು ಕಾರ್ಯಗತಗೊಳಿಸುವ ಜವಾಬ್ದಾರಿಯನ್ನು ಮುಖ್ಯವಾಗಿ ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ವಹಿಸಲಾಗಿದೆ. ಗಂಗಾವತಿಯ ಗ್ರಾಮಸೇವಕರ ತರಬೇತಿ ಕೇಂದ್ರ, ಸಾಮಾನ್ಯ ಕೃಷಿ ಸಂಶೋಧನ ಕೇಂದ್ರ, ತುಂಗಭದ್ರಾ ಕೃಷಿ ಅಬಿsವೃದ್ಧಿ ಕೇಂದ್ರ, ವ್ಯವಸಾಯ ಮತ್ತು ತೋಟಗಾರಿಕೆ ಇಲಾಖೆಗಳು ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿವೆ. ಕೈಗಾರಿಕೆ ಜಿಲ್ಲೆಯ ಕುಷ್ಟಗಿ ಮತ್ತು ಬಸಾಪುರದಲ್ಲಿ ಎರಡು ಕೈಗಾರಿಕಾ ಪ್ರದೇಶಗಳಿದ್ದು, ಇವುಗಳಲ್ಲಿ 47 ಖನಿಜ ಹಾಗೂ ಲೋಹದ ಕೈಗಾರಿಕೆಗಳಿವೆ. ಇಲ್ಲಿಂದ ಅಕ್ಕಿ ಮತ್ತು ಗ್ರಾನೈಟ್‌ಗಳ ರಫ್ತು ಆಗುತ್ತದೆ. ಗಂಗಾವತಿಯನ್ನು 'ಭತ್ತದ ಕಣಜ' ಎಂದು ಕರೆಯಲಾಗುತ್ತದೆ. ಕೊಪ್ಪಳ ತಾಲೂಕು ವಾಹನ, ಸೀರೆ ಮತ್ತು ಕೂದಲಿನ ಸಣ್ಣ ಕೈಗಾರಿಕೆಗೆ ಹೆಸರಾಗಿದೆ. ವ್ಯಾಪಾರ-ವಹಿವಾಟು ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳು ಅದಿsಕವಾಗಿ ಬೆಳೆಯುವುದರಿಂದ ಹೊರ ಜಿಲ್ಲೆಗಳು ಮತ್ತು ಹೊರ ರಾಜ್ಯಗಳೊಂದಿಗೆ ವ್ಯಾಪಾರ ವಹಿವಾಟು ಹೆಚ್ಚು. ಎಣ್ಣೆ ಬೀಜಗಳು, ಸೇಂಗಾ ಎಣ್ಣೆ, ದ್ವಿದಳ ಧಾನ್ಯಗಳು ಮತ್ತು ಹತ್ತಿ ಹೊರ ರಾಜ್ಯಗಳಿಗೆ ರಫ್ತಾಗುತ್ತವೆ. ಮಹಾರಾಷ್ಟ್ರದ ಸೋಲಾಪುರ, ಪುಣೆ, ಮುಂಬಯಿ ಹಾಗೂ ತಮಿಳುನಾಡಿನ ಕೊಯಮತ್ತೂರುಗಳಿಗೆ ಇಲ್ಲಿಂದ ಸರಕುಗಳು ಹೋಗುತ್ತವೆ. ಹದಮಾಡಿದ ಚರ್ಮಕ್ಕೆ ಹೊಸಪೇಟೆ, ಗದಗಗಳಲ್ಲಿ ಮಾರುಕಟ್ಟೆಗಳಿವೆ. ತೆಂಗಿನಕಾಯಿ, ಬೆಲ್ಲ, ಮರ, ವನಸ್ಪತಿ, ಹೊಗೆಸೊಪ್ಪು, ಕೃತಕ ರೇಷ್ಮೆ ಮೊದಲಾದ ವಸ್ತುಗಳನ್ನು ಜಿಲ್ಲೆಗೆ ಆಮದು ಮಾಡಿಕೊಳ್ಳಲಾಗುವುದು. ಹತ್ತಿ, ಸೇಂಗಾ, ಹುಣಿಸೆಹಣ್ಣು, ಮೆಣಸಿನಕಾಯಿ ಮತ್ತು ಕೈಮಗ್ಗದ ಬಟ್ಟೆಗಳಿಗೆ ಕೊಪ್ಪಳ ದೊಡ್ಡ ವ್ಯಾಪಾರ ಕೇಂದ್ರ. ಬತ್ತ, ಜೋಳ, ಸೇಂಗಾ, ಬೆಲ್ಲ, ಹರಳು, ಸಜ್ಜೆ ಇವುಗಳಿಗೆ ಗಂಗಾವತಿ ಮುಖ್ಯ ವ್ಯಾಪಾರ ಸ್ಥಳ. ಕುಷ್ಟಗಿ, ಯಲಬುರ್ಗ, ಕುಕನೂರು ಇತರ ಮುಖ್ಯ ವ್ಯಾಪಾರ ಕೇಂದ್ರಗಳು. 93 ಕೃಷಿ ಮಾರಾಟ ಸಹಕಾರ ಸಂಘಗಳಿವೆ. 4 ನಿಯಂತ್ರಿತ ಮಾರುಕಟ್ಟೆಗಳು, 12ಉಪ ಮಾರುಕಟ್ಟೆಗಳಿವೆ. ಸಹಕಾರಿ ರಂಗ ಆರ್ಥಿಕ ಚಟುವಟಿಕೆಗಳ ಎಲ್ಲ ಕ್ಷೇತ್ರಗಳಲ್ಲೂ ಕೈ ಹಾಕಿದೆ. ಜಿಲ್ಲಾ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆ ಕೃಷಿ ಸಾಲಗಳನ್ನು ನೀಡುತ್ತ ಬಂದಿದೆ. 172 ಕೃಷಿ ಸಾಲ ನೀಡಿಕೆ ಸಹಕಾರ ಸಂಘಗಳು ಕಾರ್ಯನಿರತವಾಗಿವೆ. ವ್ಯವಸಾಯೇತರ ಸಾಲನೀಡಿಕೆ ಸಹಕಾರ ಸಂಘಗಳ ಸಂಖ್ಯೆ 55. ಸಾಲೇತರ ಸಹಕಾರ ಸಂಘಗಳ ಸಂಖ್ಯೆ 465 (1998). ಹಾಲು ಉತ್ಪಾದನೆ, ಕೋಳಿ ಸಾಕಣೆ, ಮೀನು ಮಾರಾಟ, ಕಂಬಳಿ ಮಾರಾಟ, ತೋಟಗಾರಿಕೆ ಉತ್ಪನ್ನಗಳ ಮಾರಾಟ ಈ ಎಲ್ಲ ವ್ಯವಹಾರಗಳಲ್ಲೂ ಸಹಕಾರಿ ಸಂಘಗಳ ಪಾತ್ರ ಪ್ರಮುಖವಾಗಿದೆ. ಶಿಕ್ಷಣ, ಆರೋಗ್ಯ ಮತ್ತು ಅಭಿವೃದ್ಧಿ ಜಿಲ್ಲೆಯ ಸಾಕ್ಷರತಾ ಪ್ರಮಾಣ ಸೇ.55.02. ಅದರಲ್ಲಿ ಸೇ.169.15 ಪುರುಷರು, ಸೇ.40.76 ಮಹಿಳೆಯರು ಸಾಕ್ಷರರಾಗಿದ್ದಾರೆ. ಸಾಕ್ಷರತಾ ಆಂದೋಲನ ಯೋಜನೆ ಜಿಲ್ಲೆಯಲ್ಲಿ ಕಾರ್ಯನಿರತ ವಾಗಿರುವುದಲ್ಲದೆ ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಾಗಿ ಶಾಲೆಗಳನ್ನು ತೆರೆದು ಶಿಕ್ಷಣ ಒದಗಿಸಲಾಗುತ್ತಿದೆ. ಮಕ್ಕಳನ್ನು ಶಾಲೆಗೆ ಸೇರಿಸಲು ಒಡಂಬಡಿಸಿ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಅವರಿಗೆ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನವೂ ನಡೆದಿದೆ. ಆದರೆ ಅಜ್ನಾನ, ಬಡತನ, ಕುಟುಂಬದಲ್ಲಿ ಸಾಮಾನ್ಯ ಶಿಕ್ಷಣದ ಜೊತೆಗೆ ಉನ್ನತ ಶಿಕ್ಷಣ ನೀಡುವ 9 ಕಾಲೇಜುಗಳು, ತಾಂತ್ರಿಕ ಶಿಕ್ಷಣ ನೀಡುವ 3 ಪಾಲಿಟೆಕ್ನಿಕ್‍ಗಳು ಇವೆ. ಆರೋಗ್ಯ ಸುಧಾರಣೆಗಾಗಿ 5 ಸರ್ಕಾರಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ. ಭಾರತೀಯ ವೈದ್ಯಪದ್ಧತಿಯ ಚಿಕಿತ್ಸಾಲಯಗಳು ಮತ್ತು ಅನೇಕ ಸರ್ಕಾರಿ ಆರೋಗ್ಯ ಕೇಂದ್ರಗಳು ಇವೆ. ಸಮಗ್ರ ಗ್ರಾಮ ಸ್ವಸಹಾಯ ಯೋಜನೆ, ಗ್ರಾಮೀಣ ಇಂಧನ ಕಾರ್ಯಕ್ರಮ, ಮಾನವ ದಿನಗಳ ಕೆಲಸಗಳ ಸೃಷ್ಟಿ, ನಿರ್ಮಲ ಗ್ರಾಮ ಯೋಜನೆ, ಇಂದಿರಾ ಆವಾಸ್ ಯೋಜನೆ, ಪ್ರಧಾನ ಮಂತ್ರಿಗಳ ರಸ್ತೆ ನಿರ್ಮಾಣ ಯೋಜನೆ, ಕೊಳವೆ ನೀರು ಸರಬರಾಜು ಯೋಜನೆ ಮೊದಲಾದವು ಗ್ರಾಮಗಳ ನಾಗರಿಕ ಸೌಲಭ್ಯಗಳನ್ನು ಹೆಚ್ಚಿಸಲು ಉದ್ದೇಶಿತವಾಗಿವೆ. ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಸಮಿತಿಗಳು ಗ್ರಾಮೀಣ ಪ್ರದೇಶದ ಪ್ರತಿನಿದಿsಗಳಿಂದ ಕೂಡಿದ್ದು ಈ ಪ್ರದೇಶದ ಅಬಿsವೃದ್ಧಿ ಕಾರ್ಯಗಳ ಮುಖ್ಯ ಜವಾಬ್ದಾರಿ ಹೊತ್ತಿವೆ. ಸಾರಿಗೆ ಸಂಪರ್ಕ ಕೊಪ್ಪಳ ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿ ಸಂಪರ್ಕಗಳಿವೆ. ರಾಷ್ತ್ರೀಯ ಹೆದ್ದಾರಿ ೧೩ (NH-13) ಮಹಾರಾಷ್ಟ್ರದ ಸೊಲ್ಲಾಪುರದಿಂದ ವಿಜಯಪುರ, ಚಿತ್ರದುರ್ಗ ಮಾರ್ಗವಾಗಿ ಮಂಗಳೂರಿಗೆ ತಲುಪುತ್ತದೆ. ಇದು ಜಿಲ್ಲೆಯ ಮುಖ್ಯ ಪಟ್ಟಣವಾದ ಕುಷ್ಟಗಿಯ ಮೂಲಕ ಹಾದು ಹೋಗುತ್ತದೆ. ರಾಷ್ಟ್ರೀಯ ಹೆದ್ದಾರಿ ೬೩ (NH-63) ಆಂಧ್ರ ಪ್ರದೇಶದ ಗುತ್ತಿಯಿಂದ ಬಳ್ಳಾರಿ, ಹುಬ್ಬಳ್ಳಿ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಲುಪುತ್ತದೆ. ಜಿಲ್ಲೆಯ ಒಳಗೆ ಜಿಲ್ಲಾ ಕೇಂದ್ರದಿಂದ ಎಲ್ಲ ತಾಲ್ಲೂಕುಗಳನ್ನು ಕೂಡಿಸುವ ರಾಜ್ಯ ಹೆದ್ದಾರಿಗಳಿವೆ. ಕೊಪ್ಪಳದಿಂದ ರಾಯಚೂರು, ಗದಗ, ಶೋರಾಪುರ, ಬಳ್ಳಾರಿ, ಮೊದಲಾದ ಜಿಲ್ಲೆಯ ಹೊರ ಸ್ಥಳಗಳಿಗೆ ರಸ್ತೆ ಸಂಪರ್ಕವಿದೆ. ಹುಬ್ಬಳ್ಳಿ-ಗುಂತಕಲ್ ರೈಲುಮಾರ್ಗವು ಕೊಪ್ಪಳ ಜಿಲ್ಲೆಯಲ್ಲಿ ಹಾದು ಹೋಗುತ್ತದೆ. ಬೆಂಗಳೂರು, ಕೊಲ್ಹಾಪುರ, ಹೈದರಾಬಾದ್, ವಿಜಯವಾಡ ನಗರಗಳಿಗೆ ರೈಲುಸಂಪರ್ಕವಿದೆ. ಕೊಪ್ಪಳ ಹಾಗು ಮುನಿರಾಬಾದಿನ ರೈಲು ನಿಲ್ದಾಣಗಳು ನೈರುತ್ಯ ರೇಲ್ವೆಯ ಹುಬ್ಬಳ್ಳಿ ವಿಭಾಗಕ್ಕೆ ಸೇರುತ್ತವೆ. ಕೊಪ್ಪಳದಿಂದ ೮ ಕಿ.ಮೀ. ದೂರದಲ್ಲಿರುವ ಗಿಣಿಗೇರಾ ಸಮೀಪ ಮೆಸರ್ಸ್. ಎಂ.ಎಸ್.ಪಿ.ಎಲ್ ಲಿಮಿಟೆಡ್ ರವರ ವಿಮಾನ ನಿಲ್ದಾಣ ಬಳಕೆಯಲ್ಲಿದೆ. ಇತಿಹಾಸ ಕೊಪ್ಪಳ ಜಿಲ್ಲೆ ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಆಸುಪಾಸಿನಲ್ಲಿದ್ದು ಪ್ರಾಚೀನ ಕಾಲದಿಂದಲೂ ಜನವಸತಿ ಹೊಂದಿದ ಪ್ರದೇಶವಾಗಿದೆ. ಗಂಗಾವತಿ ತಾಲ್ಲೂಕಿನ ಬೆಂಕಲ್ ಮತ್ತು ಕೆರೆಹಾಳ್ ನೆರೆಯ ರಾಯಚೂರು ಜಿಲ್ಲೆಯ ಮಸ್ಕಿ, ಹಾಳಾಪುರ, ಕಲ್ಲೂರು ಮೊದಲಾದ ಕಡೆಗಳಲ್ಲಿ ಇತಿಹಾಸ ಪೂರ್ವ ಕಾಲದ ನಿವೇಶನಗಳಿದ್ದುದನ್ನು ವಿದ್ವಾಂಸರು ಗುರುತಿಸಿದ್ದಾರೆ. ಕೊಪ್ಪಳ ಮತ್ತಿತರ ಕಡೆಗಳಲ್ಲಿ ಬೃಹತ್ ಶಿಲಾ ಸಮಾದಿsಗಳು ದೊರೆತಿವೆ. ಶಿಲಾಯುಗದ ಉಪಕರಣಗಳು, ಮಣ್ಣಿನ ಮಡಿಕೆಗಳು, ಟೆರಕೋಟ ಮೂರ್ತಿಗಳು ಇಲ್ಲಿ ದೊರೆತಿವೆ. ಈ ಆಧಾರಗಳ ಮೇಲೆ ಈ ಪ್ರದೇಶ ದಕ್ಷಿಣ ಭಾರತದ ಅತಿ ಪುರಾತನ ಮಾನವ ನೆಲೆಗಳನ್ನು ಹೊಂದಿದ್ದ ವಲಯಗಳಲ್ಲೊಂದೆಂದು ಹೇಳಬಹುದು. ಕೊಪ್ಪಳದ ಬಳಿಯ ಮಲಿಮಲ್ಲಪ್ಪ ಬೆಟ್ಟದ ತುದಿಯ ಮೇಲೆ ಅನೇಕ ಹಾಸುಗಲ್ಲಿನ ಕಟ್ಟಡಗಳು ಕಂಡುಬಂದಿವೆ. ಅವನ್ನು ಸ್ಥಳೀಯವಾಗಿ 'ಮೊರಿಯರ ಅಂಗಡಿ' ಎಂದು ಕರೆಯುತ್ತಾರೆ. ಇದು ಮೌರ್ಯರ ಕಾಲದ ವಸತಿಯ ಬಗ್ಗೆ ಮತ್ತು ಆಗ ಉತ್ತರ ಭಾರತದ ಜನ ಇಲ್ಲಿ ಮಾರುಕಟ್ಟೆಗಳನ್ನು ಸ್ಥಾಪಿಸಿ ವಾಣಿಜ್ಯ ವ್ಯವಹಾರಗಳನ್ನು ನಡೆಸುತ್ತಿದ್ದ ಬಗ್ಗೆ ಸುಳಿವು ನೀಡುತ್ತದೆ. ಪೌರಾಣಿಕ ಐತಿಹ್ಯಗಳು ಈ ಪ್ರದೇಶದಲ್ಲೂ ಇತರೆಡೆಗಳಂತೆಯೆ ಅಸ್ತಿತ್ವದಲ್ಲಿವೆ. ಪಾಲ್ಕಿಗುಂಡು ಬೆಟ್ಟ ಮತ್ತು ಮಲಿ ಮಲ್ಲಪ್ಪನ ಬೆಟ್ಟದ ನಡುವಿನ ಬಯಲನ್ನು ಪಾಂಡವರ ವಠಾರ ಎಂದು ಕರೆಯಲಾಗಿದೆ. ಇಲ್ಲೂ ಹಾಸುಗಲ್ಲು ಕಟ್ಟಡಗಳಿವೆ. ಗಂಗಾವತಿ ತಾಲ್ಲೂಕಿನ ಆನೆಗೊಂದಿ ರಾಮಾಯಣ ಕಾಲದ ಕಿಷ್ಕಿಂದೆಯ ಭಾಗವಾಗಿತ್ತೆಂದು ನಂಬಿಕೆಯಿದೆ. ಗವಿಮಠ ಬೆಟ್ಟ ಮತ್ತು ಪಾಲ್ಕಿಗುಂಡು ಬೆಟ್ಟದಲ್ಲಿ ಒಂದೊಂದು ಅಶೋಕನ ಶಾಸನಗಳು ದೊರೆತಿವೆ. ಕೌಟಿಲ್ಯ ತನ್ನ ಅರ್ಥಶಾಸ್ತ್ರದಲ್ಲಿ ಮೌರ್ಯ ಸಾಮ್ರಾಜ್ಯದ ಕಾಲದಲ್ಲಿ ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವೆ ನಡೆಯುತ್ತಿದ್ದ ವಾಣಿಜ್ಯ ಹಾಗೂ ಆಗಿನ ವ್ಯಾಪಾರ ಸರಕುಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಮೌರ್ಯ ಸಾಮ್ರಾಜ್ಯದ ಹೊರಗಿನ ದಕ್ಷಿಣ ರಾಜ್ಯಗಳನ್ನು ಚೋಳ, ಪಾಂಡ್ಯ, ಸಾತಿಯಪುತ, ಕೇರಲಪುತ ಮತ್ತು ತಂಬಪನ್ನಿ (ಶ್ರೀಲಂಕಾ) ಎಂದು ಅಶೋಕನ ಶಾಸನಗಳಲ್ಲಿ ಹೆಸರಿಸಲಾಗಿದೆ. ಈ ದೃಷ್ಟಿಯಿಂದ ನೋಡಿದಾಗ ಪೂರ್ವೋಕ್ತ ದೇಶಗಳು ದಖನ್ನಿನ ಹೊರಗಿದ್ದು ಆಂದಿನ ದಖನ್ನಿನ ಪ್ರದೇಶ ಮೌರ್ಯ ಸಾಮ್ರಾಜ್ಯದ ಒಂದು ಪ್ರಾಂತ್ಯವಾಗಿದ್ದದ್ದು ತಿಳಿದುಬರುತ್ತದೆ. ಮೌರ್ಯರ ಶಾಸನಗಳಲ್ಲಿ ಬರುವ ಸುವರ್ಣಗಿರಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಎಂದು ಕೆಲವು ವಿದ್ವಾಂಸರು ಗುರುತಿಸಿದ್ದರೆ, ಇನ್ನು ಕೆಲವರು ಇದನ್ನು ಮಸ್ಕಿ ಇರಬಹುದೆಂದು ಅಬಿsಪ್ರಾಯಪಟ್ಚಿದ್ದಾರೆ. ಅದೇನೇ ಇದ್ದರೂ ಈ ಪ್ರದೇಶ ಬಹು ಪುರಾತನ ನಾಗರಿಕತೆ ಮತ್ತು ಸಂಸ್ಕøತಿಗಳ ನೆಲೆಬೀಡೆಂಬುದು ಸ್ಪಷ್ಟವಾಗಿದೆ. ಮೌರ್ಯ ಸಾಮ್ರಾಜ್ಯದ ಪತನಾನಂತರ ದಖನ್‍ನಲ್ಲಿ ಸ್ಥಾಪಿತವಾದ ಪ್ರಥಮ ಸ್ವತಂತ್ರ ಸಾಮ್ರಾಜ್ಯವೆಂದರೆ ಶಾತವಾಹನರದು. ಇಂದಿನ ಮಹಾರಾಷ್ಟ್ರ ರಾಜ್ಯದ ಪ್ರತಿಷಾವಿನ ಅಥವಾ ಪೈಠಣ್ ಅನ್ನು ರಾಜಧಾನಿಯಾಗಿ ಹೊಂದಿದ್ದ ಈ ಸಾಮ್ರಾಜ್ಯದ ಭಾಗವಾಗಿ ಕೊಪ್ಪಳ ಉನ್ನತ ಸ್ಥಿತಿಗೆ ಬಂದಿತು. ಕ್ರಿ.ಪೂ.3ನೆಯ ಶತಮಾನದಿಂದ ಕ್ರಿ.ಶ 2ನೆಯ ಶತಮಾನದವರೆಗೂ ಆಳಿದ ಈ ವಂಶದ ಸಾಮ್ರಾಟರು ಉತ್ತರ ಭಾರತದವರೆಗೂ ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿದರು. ಕೊನೆಗೆ ದಕ್ಷಿಣ ಪಥಕ್ಕೆ ಸೀಮಿತವಾದ ಇವರು ತುಂಗಭದ್ರಾ ದಕ್ಷಿಣಕ್ಕೂ ತಮ್ಮ ಆಳಿಕೆಯನ್ನು ಚಾಚಿದ್ದರು. ಶಾತವಾಹನರ ಕಾಲದಿಂದ ಕೊಪ್ಪಳ ಪ್ರಸಿದ್ಧಿ ಪಡೆದಿತ್ತು. ಇಲ್ಲಿನ ಸುತ್ತಮುತ್ತಲ ಬೆಟ್ಟಗುಡ್ಡಗಳಿಗೆ ಕೊಪಣ್ರಾದಿ ಮತ್ತು ಕುಪಣಾಚಲ ಎಂಬ ಹೆಸರುಗಳಿವೆ. ಕೊಪ್ಪಳಕ್ಕೆ ಕೊಪಣ ಅಥವಾ ಕೋಪಣ ನಗರವೆಂಬ ಹೆಸರಿದ್ದಿತು. ಈ ಜಿಲ್ಲೆಯ ಕವಲೂರು, ಆಳವಂಡಿ, ಮಾದಿನೂರು, ಕುಕ್ಕನೂರು , ಪುರ, ಆನೆಗೊಂದಿ, ಕಲ್ಲೂರ ,ಇಟಗಿ ಮತ್ತು ಮುಧುವೊಳಲು ಪ್ರಾಚೀನ ಕಾಲದಿಂದಲೂ ಅಸ್ತಿತ್ವದಲ್ಲಿವೆ. ಸಾತವಾಹನರ ಅನಂತರ ಕರ್ನಾಟಕದ ಉತ್ತರ ಭಾಗದಲ್ಲಿ ಮತ್ತು ಕರಾವಳಿಯಲ್ಲಿ ಕದಂಬರು ಪ್ರಬಲ ರಾಜ್ಯಸ್ಥಾಪಿಸಿ ಆಳಿದರು. ಆದರೆ ದಕ್ಷಿಣದಲ್ಲಿ ತಲಕಾಡಿನ ಗಂಗರು, ಪೂರ್ವದಲ್ಲಿ ವಾಕಾಟಕರು ಕದಂಬರ ಸಮಕಾಲೀನರಾಗಿ ಆಳಿದರು. ಕದಂಬರು ಈ ಜಿಲ್ಲೆಯ ಮೇಲೆ ಎಷ್ಟು ನಿಯಂತ್ರಣ ಹೊಂದಿದ್ದರು ಎಂದು ಹೇಳಲು ಸ್ಪಷ್ಟ ಆಧಾರಗಳು ಲಭ್ಯವಿಲ್ಲ. ಆದರೆ ಚಿತ್ರದುರ್ಗದ ಬಳಿಯ ಚಂದ್ರವಳ್ಳಿಯಲ್ಲಿ ಕದಂಬರ ಶಾಸನ ದೊರೆತಿರುವುದರಿಂದ ಈ ಜಿಲ್ಲೆಯ ಮೇಲೆ ಒಂದಲ್ಲ ಒಂದು ಕಾಲದಲ್ಲಿ ಭಾಗಶಃವಾಗಿ ಅಥವಾ ಪೂರ್ಣವಾಗಿ ಅವರು ನಿಯಂತ್ರಣ ಹೊಂದಿದ್ದರು ಎಂದು ಹೇಳಬಹುದು. ಇದೇ ವೇಳೆಗೆ ಮಧ್ಯ ಭಾರತದಲ್ಲಿ ಪ್ರಬಲ ರಾಜ್ಯ ಸ್ಥಾಪಿಸಿದ ವಾಕಾಟಕರು ಕುಂತಳ ದೇಶದವರೆಗೂ ತಮ್ಮ ರಾಜ್ಯ ವಿಸ್ತರಿಸಿದ್ದರೆಂದು ತಿಳಿದುಬರುತ್ತದೆ. ಅವರು ಈ ಪ್ರದೇಶವನ್ನು ಸಾಕಷ್ಟು ಕಾಲ ಆಳಿರಬೇಕು. ಕೊಪ್ಪಳ ಜಿಲ್ಲೆಗೆ ಸಮೀಪದಲ್ಲಿ ಈಗಿನ ಬಿಜಾಪುರ ಜಿಲ್ಲೆಯ ಬಾದಾಮಿಯಲ್ಲಿ 6ನೆಯ ಶತಮಾನದಲ್ಲಿ ಪ್ರವರ್ಧಮಾನಕ್ಕೆ ಬಂದ ಚಳುಕ್ಯ ಮನೆತನ ಪರ್ಯಾಯ ದ್ವೀಪದಲ್ಲಿ ಒಂದು ಪ್ರಬಲ ಸಾಮ್ರಾಜ್ಯವನ್ನು ಕಟ್ಟುವಲ್ಲಿ ಸಫಲವಾಯಿತು. ಕದಂಬ ರಾಜ್ಯ ಬಹುಮಟ್ಟಿಗೆ ಚಳುಕ್ಯ ಸಾಮ್ರಾಜ್ಯದಲ್ಲಿ ವಿಲೀನವಾಗಿ ಕೆಲವು ಶಾಖೆಗಳ ಆಳಿಕೆ ಮಾತ್ರ ಮುಂದುವರಿಯಿತು. ಬಾದಾಮಿ ಚಳುಕ್ಯರ ಶಾಸನಗಳು ಕೊಪ್ಪಳ ಜಿಲ್ಲೆಯ ಕೊಪ್ಪಳ, ಹಲಗೇರಿ, ಕಲ್ಲೂರ ಇಟಗಿ ಮತ್ತು ಕುಕನೂರು ಮೊದಲಾದೆಡೆಗಳಲ್ಲಿ ದೊರೆತಿವೆ. ಇವರು 757ರಲ್ಲಿ ರಾಷ್ಟ್ರಕೂಟರಿಂದ ಪರಾಜಯ ಹೊಂದುವವರೆಗೂ ಸಮಗ್ರವಾಗಿ ಆಳಿದರು. ಇವರ ಕಾಲದಲ್ಲಿ ಕೊಪ್ಪಳ ಒಂದು ಪಟ್ಟಣವಾಗಿ ಬೆಳೆಯಿತು. ಚೀನಿ ಪ್ರವಾಸಿ ಯುವಾನ್‍ಚಾಂಗನು ದಾಖಲಿಸಿರುವ ಕೊಂಕಿನಪುಲೋ ಎಂಬುದು ಕೊಪ್ಪಳವೆಂದು ಗುರುತಿಸಲಾಗಿದೆ. ರಾಷ್ಟ್ರಕೂಟರು, ಬಾದಾಮಿ ಚಳುಕ್ಯರನ್ನು ಸೋಲಿಸಿ ಅವರ ಉತ್ತರಾದಿsಕಾರಿಗಳಾಗಿ ಮಾನ್ಯಖೇಟದಿಂದ ಆಳತೊಡಗಿದ್ದು ಕೊಪ್ಪಳ ಜಿಲ್ಲೆಯ ಇತಿಹಾಸಕ್ಕೆ ಹೊಸ ತಿರುವನ್ನು ನೀಡಿತು. ಆಗ ಕೋಪ್ಪಳ ಅಥವಾ ಕೋಪಣ ನಗರ ಜೈನರ ಪುಣ್ಯಸ್ಥಳವಾಗಿ ಪ್ರಸಿದ್ಧವಾಗಿತ್ತು. ದಕ್ಷಿಣ ಭಾರತದ ಜೈನ ರಾಜಮನೆತನದವರು ವಿಶೇಷವಾಗಿ ಇಲ್ಲಿಗೆ ಯಾತ್ರೆ ಬರುತ್ತಿದ್ದರು. ಕೊಪ್ಪಳ, ಇಟಗಿ, ಕಲ್ಲೂರ, ಅರಕೇರಿ, ಸಂಕನೂರು, ಅಳವಂಡಿ, ಬೆಣಗೇರಿಗಳಲ್ಲಿ ರಾಷ್ಟ್ರಕೂಟರಿಗೆ ಸಂಬಂದಿsಸಿದ ಶಾಸನಗಳು ದೊರೆತಿವೆ. ಕೊಪ್ಪಳದಲ್ಲಿ ರಾಷ್ಟ್ರಕೂಟರ ದಂಡನಾಯಕರಲ್ಲೊಬ್ಬನಾದ ಮಾಮರಸನೆಂಬಾತನಿದ್ದನೆಂದು ತಿಳಿದುಬರುತ್ತದೆ. ರಾಷ್ಟ್ರಕೂಟರ ಸಾಮಂತರೂ ನಿಕಟ ಬಂಧುಗಳೂ ಆಗಿದ್ದ ತಲಕಾಡಿನ ಗಂಗರು ಈ ಪ್ರದೇಶದೊಂದಿಗೆ ಹೆಚ್ಚಿನ ಸಂಪರ್ಕ ಮತ್ತು ಅದಿsಕಾರ ಹೊಂದಿದ್ದರು. ಗಂಗ ಇಮ್ಮಡಿ ಬೂತುಗನ (936-61) ಶಾಸನ ಸಮೀಪದ ಇಟಗಿಯಲ್ಲಿ ದೊರೆತಿದೆ. ಈತ ರಾಷ್ಟ್ರಕೂಟ ಮುಮ್ಮಡಿ ಅಮೋಘವರ್ಷನ ಮಗಳು ರೇವಕನಿಮ್ಮಡಿಯನ್ನು ಮದುವೆಯಾಗಿದ್ದ. ಈ ಸಂದರ್ಭದಲ್ಲಿ ಚಕ್ರವರ್ತಿಯು ಬೂತುಗನಿಗೆ ಪುರಿಗೆರೆ 300, ಬೆಳ್ವೊಲ 300, ಕಿಸುಕಾಡು 70 ಮತ್ತು ಬಾಗೆನಾಡು 70 ಇವುಗಳನ್ನು ನೀಡಿದ್ದ. ಕುಕನೂರಿನ ತಾಮ್ರಶಾಸನ ಇಮ್ಮಡಿ ಮಾರಸಿಂಹನಿಗೆ ಸೇರಿದ್ದು ಅದರಲ್ಲಿ ಗಂಗರ ವಂಶಾವಳಿಯನ್ನು ನೀಡಲಾಗಿದೆ. ಗಂಗಾವತಿ ತಾಲ್ಲೂಕಿನ ಹೆಬ್ಬಾಳದ ಶಾಸನ ಈ ಭಾಗದಲ್ಲಿ ಗಂಗರು ಆಳಿದ್ದಕ್ಕೆ ಸಾಕ್ಷಿಯಾಗಿದೆ. ಗಂಗ ಮನೆತನಕ್ಕೆ ಕೊಪ್ಪಳ ಪುಣ್ಯಕ್ಷೇತ್ರವಾಗಿದ್ದುದಲ್ಲದೆ ಅಲ್ಲಿ ರಾಜಮನೆತನದ ಅನೇಕ ಸದಸ್ಯರು ಸ್ವಯಂಪ್ರೇರಣೆಯಿಂದ ಸಲ್ಲೇಖನ ವ್ರತ ಕೈಗೊಂಡು ದೇಹತ್ಯಾಗ ಮಾಡಿದ ವಿವರಗಳು ತಿಳಿದುಬರುತ್ತವೆ. ಇವರಲ್ಲಿ ಇಮ್ಮಡಿ ಬೂತುಗನ ಪತ್ನಿ ಪದ್ಮಬ್ಬರಸಿ, ಮಾರಸಿಂಹನ ಅಕ್ಕ ಹಾಗೂ ಚಾಳುಕ್ಯ ಹರಿಗನ ಪತ್ನಿ ಬಿಜ್ಜಬ್ಬರಸಿ ಮೊದಲಾದವರು ಸೇರಿದ್ದಾರೆ. ಕೊಪ್ಪಳದಲ್ಲಿ ಹಲವಾರು ಜೈನ ಮುನಿಗಳು ಮೋಕ್ಷ ಪಡೆದ ವಿವರಗಳು ಅಲ್ಲಿನ ಶಾಸನಗಳಲ್ಲಿ ದೊರೆಯುತ್ತವೆ. ರಾಷ್ಟ್ರಕೂಟರ ಆಳಿಕೆಯನ್ನು ಕೊನೆಗಾಣಿಸಿ ಚಾಳುಕ್ಯರ ಅದಿsಕಾರವನ್ನು ಮತ್ತೆ ಸ್ಥಾಪಿಸಿದ ಚಾಳುಕ್ಯ ತೈಲಪನ ಮೊದಲ ವರ್ಷದ ಆಳಿಕೆಯ (973) ಶಾಸನ ಮಾದಿನೂರಿನಲ್ಲಿದೆ. ಅದರಲ್ಲಿ ರಾಜನು ಬ್ರಹ್ಮಾಂಡಕ್ರತು ಎಂಬ ಯಾಗವನ್ನು ಮಾಡಿದನೆಂದು ಹೇಳಿದೆ. ಕಲ್ಯಾಣದ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶದವರ ಆಳಿಕೆಯು 12ನೆಯ ಶತಮಾನದ ಉತ್ತರಾರ್ಧದವರೆಗೂ ಮುಂದುವರಿಯಿತು. ಈ ಯುಗದಲ್ಲಿ ಹೇಮಾವತಿ, ಹೆಂಜೇರು ಮತ್ತು ಕಂಪಿಲಿಯಿಂದ ಆಳಿದ ನೊಳಂಬರು ಈ ಜಿಲ್ಲೆಯ ಕೆಲವು ಭಾಗಗಳನ್ನು ಆಳಿರುವ ಸಂಭವ ಹೆಚ್ಚಿದೆ. ಕಳಚುರಿಗಳು ಅಲ್ಪಾವದಿsಯ ಕಾಲ ಆಳಿದರೂ ಅವರ ಕೆಲ ಶಾಸನಗಳು ಜಿಲ್ಲೆಯಲ್ಲಿ ದೊರೆತಿವೆ. ಆ ಕಾಲದಲ್ಲಿ ಕುಕನೂರು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿತ್ತು. ಅಲ್ಲಿನ ಜೇಷಾವಿದೇವಿಗೆ ರಾಜರು ಮತ್ತು ದಂಡನಾಯಕರು ನಡೆದುಕೊಳ್ಳುತ್ತಿದ್ದರು. ಆಗಲೇ ಇಟಗಿಯ ಮಹದೇವ ದೇವಾಲಯ ಮತ್ತು ಕಲ್ಲೂರ ಶ್ರೀ ಕಲ್ಲೀನಾಥೇಶ್ವರ ದೇವಾಲಯ ,ಹಂಚಿನಾಳ ಸಮೀಪದ ಶೈವ ದೇವಾಲಯ'ಗಳನ್ನೂ ನಿರ್ಮಾಣಗೈದದ್ದು, ಹೊಯ್ಸಳರು ಮತ್ತು ಸೇವುಣರ ಕಾಲದಲ್ಲಿ ಈ ಪ್ರಾಂತ್ಯ ಅವರಿಬ್ಬರ ನಡುವಿನ ವಿವಾದಾತ್ಮಕ ಪ್ರದೇಶವಾಗಿತ್ತು. ಈ ಎರಡು ರಾಜ್ಯಗಳ ನಡುವೆ ಮಧ್ಯಗಾಮಿ ರಾಜ್ಯದಂತಿದ್ದ ಕಂಪಿಲಿ ರಾಜ್ಯದ ಪ್ರಬಲ ನೆಲೆಗಳಲ್ಲೊಂದಾದ ಕುಮ್ಮಟದುರ್ಗ ಕೊಪ್ಪಳ ತಾಲ್ಲೂಕಿನಲ್ಲಿದೆ. ಮೊದಲು ಕಂಪಿಲಿಯಿಂದ ಬಳ್ಳಾರಿ ಜಿಲ್ಲೆ ಆಳುತ್ತಿದ್ದ ಇಲ್ಲಿನ ಅರಸರು 1315ರಲ್ಲಿ ಕುಮ್ಮಟದುರ್ಗದಿಂದ ಆಳುತ್ತಿದ್ದುದು ಶಾಸನಗಳಿಂದ ಕಂಡುಬರುತ್ತದೆ. ದೇವಗಿರಿಯಲ್ಲಿ ನೆಲೆಸಿದ್ದ ದೆಹಲಿ ಸುಲ್ತಾನರ ಸೈನ್ಯವನ್ನು ಧೈರ್ಯದಿಂದ ಎದುರಿಸಿ ಹುತಾತ್ಮರಾದ ಕಂಪಿಲಿರಾಯ ಮತ್ತು ಕುಮಾರರಾಮ ಈ ಮನೆತನದವರು. ವಿಜಯನಗರ ಸಾಮ್ರಾಜ್ಯ ಸ್ಥಾಪನೆಯ ಮೊದಲ ಚಟುವಟಿಕೆಗಳು ಪ್ರಾರಂಭವಾದದ್ದು ಈ ಜಿಲ್ಲೆಯ ಆನೆಗೊಂದಿಯಲ್ಲಿ ಎಂದು ತಿಳಿದುಬರುತ್ತದೆ. ವಿಜಯನಗರ ಅರಸರ 1342ರ ಶಾಸನ ಆನೆಗೊಂದಿಯಲ್ಲಿ ದೊರೆತಿದೆ. ಕೊಪ್ಪಳದ 1346ರ ಶಾಸನದಲ್ಲಿ ಹರಿಹರನ ಉಲ್ಲೇಖವಿದೆ. ಆನೆಗೊಂದಿ, ಕನ್ನೇರುಮಡು, ಕೆಸರಟ್ಟಿ, ಕಲ್ಲೂರು, ಬಂಡಿಹಾಳಗಳಲ್ಲಿ ವಿಜಯನಗರದ ಅರಸರ ಮತ್ತು ಮಾಂಡಲಿಕರ ಶಾಸನಗಳು ಲಭ್ಯವಾಗಿವೆ. ವಿಜಯನಗರದ ಆಯಕಟ್ಟಿನ ಪ್ರದೇಶವಾಗಿದ್ದ ಈ ಜಿಲ್ಲೆಯ ಒಡೆತನಕ್ಕಾಗಿ ವಿಜಯನಗರ ಅರಸರು ಮತ್ತು ಬಹಮನೀ ಸುಲ್ತಾನರುಗಳ ನಡುವೆ ಆಗಾಗ ಯುದ್ಧಗಳಾಗುತ್ತಿದ್ದವು. ಕಲ್ಲೂರು ಮತ್ತು ಬಂಡಿಹಾಳದ ಶಾಸನಗಳು ಅಚ್ಯುತರಾಯನ ಕಾಲದಲ್ಲಿ ಅವನ ಮಾಂಡಲಿಕರಾಗಿದ್ದ ಗುಜ್ಜಲವಂಶದ ಅರಸರ ಬಗ್ಗೆ ತಿಳಿಸುತ್ತದೆ. ತಾಳಿಕೋಟೆಯ ಯುದ್ಧದ ತರುವಾಯವೂ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಸ್ವಲ್ಪ ಕಾಲ ಐತಿಹಾಸಿಕ ಮಹತ್ತº ಪಡೆದಿತ್ತು. ಆನೆಗೊಂದಿಯಲ್ಲಿ ಆಶ್ರಯ ಪಡೆದ ವಿಜಯನಗರದ ಅರಸು ಮನೆತನದವರು ಅಲ್ಲಿ ತಮ್ಮ ಅಧಿಕಾರವನ್ನು ಮುಂದುವರಿಸಿದರು. ಶ್ರೀರಂಗಪಟ್ಟಣದ ಪ್ರಾಂತ್ಯಾದಿsಕಾರಿಯಾಗಿದ್ದ ಶ್ರೀರಂಗರಾಯ ಆನೆಗೊಂದಿಯ ಮೂಲದವನೆಂದು ತಿಳಿದುಬರುತ್ತದೆ. 1657ರಲ್ಲಿ ಶಿವಾಜಿಯು ಆನೆಗೊಂದಿ ಮೊದಲಾದ ಒಂಬತ್ತು ಸಮತಗಳನ್ನು ಶ್ರೀರಂಗರಾಯನ ಕುಟುಂಬದ ಪೋಷಣೆಗಾಗಿ ನೀಡಿದ್ದನೆಂದು ಹೇಳಲಾಗಿದೆ. ಈ ಕಾಲದಲ್ಲಿ ಕೊಪ್ಪಳವು 'ಕೊಪಣನಾಡು' ಅಥವಾ ಕೋಪಣವೇಂಟೆ ಯ ಕೇಂದ್ರ ಸ್ಥಳವಾಗಿದ್ದಿತು. ಕಂಪಿಲಿ ರಾಜ್ಯ ಪತನಗೊಂಡು ದಖನ್ನಿನ ದೆಹಲಿ ಪ್ರಾಂತ್ಯಾದಿsಕಾರಿಯ ವಶಕ್ಕೆ ಬಂದ ದೋಆಬ್ ಪ್ರಾಂತ್ಯವು ಅಂದರೆ ಕೊಪ್ಪಳ ಜಿಲ್ಲೆ ಮತ್ತು ಈಗಿನ ರಾಯಚೂರು ಜಿಲ್ಲೆಗಳ ಪ್ರದೇಶವು ಮುಂದೆ ಸದಾ ವಿಜಯನಗರ ಮತ್ತು ಬಹಮನೀ ರಾಜ್ಯದ ನಡುವೆ ವಿವಾದಿತ ಪ್ರದೇಶವಾಗಿ ಪರಿಣಮಿಸಿತು. ರಾಯಚೂರಿನೊಂದಿಗೆ ಕೊಪ್ಪಳ ಜಿಲ್ಲೆಯ ಕೆಲವು ಭಾಗಗಳೂ ಆಗಾಗ ಈ ಎರಡು ರಾಜ್ಯ- ಸಾಮ್ರಾಜ್ಯಗಳ ನಡುವೆ ಕೈ ಬದಲಾಯಿಸುತ್ತಿದ್ದುದನ್ನು ಕಾಣಬಹುದು. ರಾಯಚೂರು ಮತ್ತು ಮುದುಗಲ್ಲು ದೀರ್ಘಕಾಲ ಬಿಜಾಪುರ - ಗುಲ್ಬರ್ಗ ಮತ್ತು ಬೀದರ್‍ನಿಂದ ಆಳಿದ ಬಹಮನೀ ರಾಜ್ಯದ ವಶದಲ್ಲಿರುತ್ತಿದ್ದುದ್ದರಿಂದ ಕೊಪ್ಪಳದ ಅನೇಕ ಸ್ಥಳಗಳೂ ಅದರ ಆಳಿಕೆಗೊಳಪಟ್ಟಿದ್ದವು. ಪದೇ ಪದೇ ಬಹಮನೀ ಸೈನ್ಯಗಳು ವಿಜಯನಗರದ ಪ್ರದೇಶಗಳಿಗೆ ನುಗ್ಗಿ ಕೊಲೆ, ಲೂಟಿ ಮತ್ತು ದಬ್ಬಾಳಿಕೆಗಳಲ್ಲಿ ತೊಡಗುತ್ತಿದ್ದವು. ಎರಡನೆಯ ದೇವರಾಯ ಮತ್ತು ಕೃಷ್ಣದೇವರಾಯ ಈ ದಾಳಿಗಳನ್ನು ಯಶಸ್ವಿಯಾಗಿ ಎದುರಿಸಿ ಸುಲ್ತಾನರ ಆಳಿಕೆಯಿಂದ ಈ ಪ್ರದೇಶವನ್ನು ಮುಕ್ತಗೊಳಿಸಿದ್ದರು. 1565ರಲ್ಲಿ ತಾಳಿಕೋಟೆ ಯುದ್ಧದಲ್ಲಿ ವಿಜಯನಗರದ ಸೈನ್ಯ ಸೋತ ಮೇಲೆ ಈ ಜಿಲ್ಲೆ ಬಹುಮಟ್ಟಿಗೆ ಬಿಜಾಪುರದ ಸುಲ್ತಾನ್‍ಶಾಹಿಯ ಅಧೀನಕ್ಕೊಳಗಾಯಿತು. ಶಿವಾಜಿ 1677ರಲ್ಲಿ ಕೊಪ್ಪಳವನ್ನು ಮುತ್ತಿ ವಶಪಡಿಸಿಕೊಂಡ. ಸ್ವಲ್ಪ ಕಾಲದಲ್ಲೇ ಬಿಜಾಪುರ ರಾಜ್ಯ ಔರಂಗಜೇಬನ ಮಹಾ ದಕ್ಷಿಣ ದಂಡಯಾತ್ರೆಗೆ ಬಲಿಯಾದ ಮೇಲೆ ಅನೇಕ ವರ್ಷಗಳ ಅರಾಜಕತೆಯ ಅನಂತರ ಈ ಜಿಲ್ಲೆ ಹೈದರಾಬಾದಿನ ನಿಜಾಮರ ಆಡಳಿತದಡಿ ಬಂದಿತು. ಹೈದರ್‍ಅಲಿ ಮತ್ತು ಟಿಪ್ಪುಸುಲ್ತಾನರ ದಂಡಯಾತ್ರೆಗಳಿಂದಾಗಿ ಈ ಪ್ರದೇಶ ಸ್ವಲ್ಪ ಅವದಿsಗೆ ಮೈಸೂರು ರಾಜ್ಯದ ಭಾಗವಾಗಿತ್ತು. ಆದರೆ 1799ರಲ್ಲಿ ಟಿಪ್ಪು ಬ್ರಿಟಿಷರಿಗೆ ಸಂಪೂರ್ಣವಾಗಿ ಸೋತ ಅನಂತರ ಆದ ರಾಜಕೀಯ ಒಡಂಬಡಿಕೆಯ ಮೇರೆಗೆ ಕೊಪ್ಪಳ ಜಿಲ್ಲೆ ಅಂದಿನ ರಾಯಚೂರು ಜಿಲ್ಲೆಯ ಭಾಗವಾಗಿ ಹೈದರಾಬಾದ್ ಸಂಸ್ಥಾನಕ್ಕೆ ಸೇರಿತು. ಹೈದರಾಬಾದ್ ನಿಜಾಮರ ಸರ್ಕಾರವು ಸಂಸ್ಥಾನವನ್ನು ಜಹಗೀರಿಗಳು, ಪೈಗಗಳು ಮತ್ತು ನಿಜಾಮರ ಖಾಸಾ ಜಮೀನುಗಳೆಂದು ವಿಂಗಡಿಸಿದ್ದಿತು. ಜಹಗೀರಿಗಳನ್ನು ರಾಜ್ಯಕ್ಕೆ ಸೈನ್ಯ ಮೊದಲಾದವನ್ನು ಒದಗಿಸಿ ಉತ್ತಮ ಸೇವೆ ಸಲ್ಲಿಸಿದವರಿಗೆ ನೀಡಲಾಗುತ್ತಿತ್ತು. ಪೈಗಗಳನ್ನು ಅರಮನೆಗೆ ಬೇಕಾದ ಶ್ರೀಮಂತರು ಮತ್ತು ಕುಲೀನರಿಗೆ ಕೊಡಲಾಗುತ್ತಿತ್ತು. ಈ ನಿಜಾಮರ ಖಾಸಾ ಜಮೀನುಗಳನ್ನು ರೈತರು ಗುತ್ತಿಗೆಗೆ ಸಾಗುವಳಿ ಮಾಡುತ್ತಿದ್ದರು. ಕೊಪ್ಪಳ ಮತ್ತು ಯಲಬುರ್ಗ ತಾಲ್ಲೂಕುಗಳು ನವಾಬ್ ಸಾಲರ್‍ಜಂಗ ಎಂಬ ಜಹಗೀರುದಾರನಿಗೆ ಸೇರಿದ್ದವು. ಕುಷ್ಟಗಿ ತಾಲ್ಲೂಕು ಒಬ್ಬ ದೇಸಾಯಿಯ ಜಹಗೀರಾಗಿದ್ದಿತು. ಆನೆಗೊಂದಿಯೂ ಒಂದು ಪುಟ್ಟ ಜಹಗೀರಾಗಿತ್ತು. ಈ ಊಳಿಗಮಾನ್ಯ ವ್ಯವಸ್ಥೆಯಲ್ಲಿ ಶ್ರೀಮಂತ ಮತ್ತು ಪ್ರಭಾವಿ ವರ್ಗದ ಅಲ್ಪಸಂಖ್ಯಾತರ ಕೈಯಲ್ಲಿ ರೈತರೂ ಕಾರ್ಮಿಕರು ಹೀನ ಸ್ಥಿತಿಯಲ್ಲಿ ಬದುಕಬೇಕಾಯಿತು. ಗ್ರಾಮದಲ್ಲಿ ಸರ್ಕಾರದ ಪರವಾಗಿ ಪಟೇಲ ಮತ್ತು ಗ್ರಾಮ ಮುಖ್ಯರಿರುತ್ತಿದ್ದರು. ಈ ಜಹಗೀರುದಾರರುಗಳು ನಿಜಾಮನಿಗೆ ವಾರ್ಷಿಕ ಪೆÇಗದಿ ಕೊಡುತ್ತಿದ್ದರು. ಅವರಿಗೆ ಪೆÇಲೀಸ್ ಮತ್ತು ನ್ಯಾಯಾಂಗ ವ್ಯವಸ್ಥೆಗಳನ್ನು ಹೊಂದುವ ಅದಿsಕಾರವಿದ್ದಿತು. ಈ ಬಗೆಯ ಆಳಿಕೆಯಲ್ಲಿ ಜನಸಾಮಾನ್ಯರ ಹಕ್ಕುಬಾಧ್ಯತೆಗಳು ಕುಂಠಿತಗೊಂಡಿದ್ದುವು. 20ನೆಯ ಶತಮಾನದ ಪ್ರಾರಂಭದ ಹೊತ್ತಿಗೆ ಭಾರತಾದ್ಯಂತ ಬಲಗೊಳ್ಳುತ್ತಿದ್ದ ಸ್ವಾತಂತ್ರ್ಯಚಳವಳಿಯ ಪ್ರಭಾವ ಹೈದರಾಬಾದ್ ಸಂಸ್ಥಾನವನ್ನೂ ತಟ್ಟದಿರಲಿಲ್ಲ. 1911ರಲ್ಲಿ ಧಾರವಾಡದಲ್ಲಿ ಜರುಗಿದ ಅಖಿಲ ಕರ್ನಾಟಕ ರಾಜಕೀಯ ಸಮ್ಮೇಳನದಲ್ಲಿ ಈ ಜಿಲ್ಲೆಯ ಹಲವರು ಬಂದು ಭಾಗವಹಿಸಿದರು. ಬೆಳಗಾಂವಿಯಲ್ಲಿ ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್‍ನ ಸಮ್ಮೇಳನ (1924) ಸ್ವಾತಂತ್ರ್ಯ ಹೋರಾಟದ ಬಗ್ಗೆ ಈ ಪ್ರಾಂತದ ಜನರ ಗಮನ ಸೆಳೆಯುವಲ್ಲಿ ಮುಖ್ಯ ಪಾತ್ರ ವಹಿಸಿತು. 1916-17 ರಿಂದಲೇ ಕೊಪ್ಪಳದಲ್ಲಿ ಒಂದು ಖಾದಿ ಪ್ರಚಾರ ಕೇಂದ್ರ ಪ್ರಾರಂಭಗೊಂಡಿತ್ತು. 1922ರಲ್ಲಿ ಆರ್.ಬಿ.ದೇಸಾಯಿಯವರು ಕುಕನೂರಿನಲ್ಲಿ ವಿದ್ಯಾನಂದ ಗುರುಕುಲವನ್ನು ಸ್ಥಾಪಿಸಿದರು. ಇದು ಜನರಲ್ಲಿ ರಾಷ್ಟ್ರೀಯ ಭಾವನೆ ಬೆಳೆಸಲು ಸಹಕಾರಿಯಾಯಿತು. 1920-21ರಲ್ಲಿ ರಾಯಚೂರಿನಲ್ಲಿ ಪಂಡಿತ ತಾರಾನಾಥರು ಸ್ಥಾಪಿಸಿದ ಹಮ್‍ದರ್ದ್ ರಾಷ್ಟ್ರೀಯ ಶಾಲೆಯು ಸ್ವಾತಂತ್ರ್ಯ ಚಳವಳಿಯ ಗುರಿಗಳನ್ನು ಪ್ರಚಾರಗೊಳಿಸಿತು. ರಾಯಚೂರಿನ ಅಡವಿರಾವ್ ಫಡ್ನಾವಿಸ್, ಆರ್.ಜಿ.ಜೋಷಿ, ಗಾಣದಾಳ್ ನಾರಾಯಣಪ್ಪ, ವೀರಣ್ಣಮಾಸ್ತರ ಮೊದಲಾದವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಚಳವಳಿ ಹರಡಿತು. 1928ರಲ್ಲಿ ರಾಯಚೂರಿನಲ್ಲಿ ಸ್ಥಾಪನೆಗೊಂಡ ಕರ್ನಾಟಕ ಸಂಘ ಇನ್ನೊಂದು ಮುಖ್ಯ ಘಟ್ಟವಾಯಿತು. 1930ರಲ್ಲಿ ಗಾಂದಿsೀಜಿಯವರು ಕೊಪ್ಪಳ ತಾಲ್ಲೂಕಿನ ಮೂಲಕ ರೈಲಿನಲ್ಲಿ ಹಾದುಹೋದಾಗ ಅವರನ್ನು ಅನೇಕರು ಭೇಟಿಯಾದರು. 1934ರಲ್ಲಿ ರಾಯಚೂರಿನಲ್ಲಿ 20ನೆಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. 1938ರಲ್ಲಿ ಹೈದರಾಬಾದ್ ಸಂಸ್ಥಾನದ ಪ್ರದೇಶ ಕಾಂಗ್ರೆಸ್ ಸಮಿತಿ ಅಸ್ತಿತ್ವಕ್ಕೆ ಬಂತು. ಈ ಭಾಗದ ಜನರು ಮೂರು ನಿಟ್ಟಿನಲ್ಲಿ ತಮ್ಮ ಹೋರಾಟವನ್ನು ಮುಂದುವರಿಸಬೇಕಾಗಿತ್ತು. ಒಂದು ಕಡೆ ಬ್ರಿಟಿಷರಿಂದ ವಿಮೊಚನೆ; ಇನ್ನೊಂದು ಕಡೆ ಜಹಗೀರ್‍ದಾರಿ ವ್ಯವಸ್ಥೆ ನಿಜಾಮ್‍ಶಾಹಿಯಿಂದ ಬಿಡುಗಡೆ; ಮೂರನೆಯದಾಗಿ ಕನ್ನಡೇತರ ರಾಜ್ಯದಿಂದ ಹೊರಬಂದು ಕನ್ನಡನಾಡಿನ ಏಕೀಕರಣ ಸಾದಿsಸುವುದು. ಸಿರೂರು ವೀರಭದ್ರಪ್ಪ ಅಳವಂಡಿ ಶಿವಮೂರ್ತಿಸ್ವಾಮಿ, ಎಲ್.ಕೆ.ಷರಾಫ್, ಡಿ.ಜಿ.ಬಿಂದು, ಜನಾರ್ಧನರಾವ್‍ದೇಸಾಯಿ, ಬುರ್ಲಿಬಿಂದು ಮಾಧವರಾವ್, ಜಿ.ಕೆ.ಪ್ರಾಣೇಶಾಚಾರ್ಯ ಮತ್ತಿತರರು ಜನಜಾಗೃತಿ ಮತ್ತು ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸಿದರು. ಸ್ವಾತಂತ್ರ್ಯ ಚಳವಳಿ ಮತ್ತು ಕರ್ನಾಟಕ ಏಕೀಕರಣ ಚಳವಳಿಗಳು ನಿಧಾನವಾಗಿಯಾದರೂ ದೃಢವಾಗಿ ಪ್ರಗತಿಯಲ್ಲಿದ್ದಾಗಲೇ ಇಲ್ಲಿ ಜನತೆ ಹೊಸ ಸಮಸ್ಯೆಯನ್ನು ಎದುರಿಸಬೇಕಾಯಿತು. 1945ರ ಅನಂತರ ಭಾರತಕ್ಕೆ ಸ್ವಾತಂತ್ರ್ಯ ಸಿಗುವುದು ನಿಚ್ಚಳವಾಗುತ್ತಿದ್ದಂತೆಲ್ಲ ಹೈದರಾಬಾದ್ ಸಂಸ್ಥಾನದ ನಿಜಾಮರು ಭಾರತ ಒಕ್ಕೂಟದಿಂದ ಪ್ರತ್ಯೇಕವಾಗುಳಿಯುವ ಪ್ರಯತ್ನದಲ್ಲಿ ತೊಡಗಿದರು. 1947ರ ಆಗಸ್ಟ್ 15ರಂದು ಭಾರತ ಸ್ವತಂತ್ರವಾಯಿತು. ಅದೇ ತಿಂಗಳ 27ರಂದು ಹೈದರಾಬಾದ್ ರಾಜ್ಯ ಭಾರತ ಒಕ್ಕೂಟದಿಂದ ಪ್ರತ್ಯೇಕವಾಗುಳಿಯಲು ನಿರ್ಧರಿಸಿ ಸ್ವಾತಂತ್ರ್ಯ ಘೂೀಷಿಸಿಕೊಂಡಿತು. ಜೊತೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿರುವವರನ್ನು ದಮನ ಮಾಡುವುದಕ್ಕಾಗಿ ಜನರಲ್ಲಿ ಭಯ ಹುಟ್ಟಿಸಲು ರಜಾಕಾರರೆಂದು ಕರೆದುಕೊಂಡ ಮುಸ್ಲಿಮ್ ಉಗ್ರವಾದಿಗಳ ಗುಂಪು ಹಿಂಸಾಚಾರಕ್ಕಿಳಿಯಿತು. ಇದರಿಂದ ಅನೇಕಕಡೆ ಬಿsೀಕರ ಲೂಟಿ, ದರೋಡೆ, ಕೊಲೆ ಸುಲಿಗೆ, ಅತ್ಯಾಚಾರಗಳು ನಡೆದವು. ಆಗ ಈ ರಾಜ್ಯದ ಜನರ ರಕ್ಷಣೆಗೆ ಭಾರತ ಸರ್ಕಾರ ಮುಂದಾಗಿ 1948ರ ಸೆಪ್ಟೆಂಬರ್ 13ರಂದು ಪೆÇಲೀಸ್ ಕಾರ್ಯಾಚರಣೆ ಪ್ರಾರಂಬಿsಸಿತು. ಅದೇ ತಿಂಗಳ 18ರಂದು ಹೈದರಾಬಾದ್ ಸಂಸ್ಥಾನವನ್ನು ವಶಪಡಿಸಿಕೊಂಡು ಭಾರತ ಒಕ್ಕೂಟದಲ್ಲಿ ಸೇರಿಸಲಾಯಿತು. 1956 ನವೆಂಬರ್ 1ರಂದು ಭಾಷಾವಾರು ರಾಜ್ಯಗಳ ರಚನೆಯಾದಾಗ ಕೊಪ್ಪಳವೂ ಸೇರಿದಂತೆ ಅಂದಿನ ರಾಯಚೂರು ಜಿಲ್ಲೆ ಮತ್ತು ಹೈದರಾಬಾದ್ ಕರ್ನಾಟಕ ಭಾಗ ವಿಶಾಲ ಮೈಸೂರು ರಾಜ್ಯದಲ್ಲಿ ಒಂದಾಯಿತು. ಸಾಂಸ್ಕೃತಿಕ ಪರಂಪರೆ ಈ ಜಿಲ್ಲೆ ಸಾಂಸ್ಕøತಿಕವಾಗಿ ಮತ್ತು ಧಾರ್ಮಿಕವಾಗಿ ಉತ್ತಮ ಪರಂಪರೆ ಹೊಂದಿದೆ. ಶೈವ ಮಠಗಳು, ಅಗ್ರಹಾರಗಳು, ಜೈನ ಕೇಂದ್ರಗಳಿಂದ ಕೂಡಿರುವುದಲ್ಲದೆ ಜನಪದ ಸಾಹಿತ್ಯ ಸಂಪತ್ತಿನಿಂದಲೂ ಕೂಡಿದೆ. ವೀರಶೈವಧರ್ಮ ಹೊಸ ಸಾಂಸ್ಕøತಿಕ ಪರಿಸರವನ್ನು ಸೃಷ್ಟಿಸಿತು. ಯಲಬುರ್ಗ ತಾಲ್ಲೂಕಿನ ಕಲ್ಲೂರ ಕಲ್ಲೀನಾಥೇಶ್ವರ ದೇವಾಲಯ(ಕಾಳಮುಖ ಶೈವ ಪರಂಪರೆಯ ಆಧಿ ಶಿಕ್ಷಣ ಕೇಂದ್ರ). ಕುಕನೂರು ತಾಲೂಕಿನ ಕುಕನೂರ ಕಲ್ಲೇಶ್ವರ ದೇವಾಲಯ ಮತ್ತು ಅದೇ ತಾಲ್ಲೂಕಿನ ಇಟಗಿಯ ಮಹಾದೇವ ದೇವಾಲಯ ಚಾಳುಕ್ಯ ಪರಂಪರೆಯ ಶಿಲ್ಪ ಮತ್ತು ವಾಸ್ತುಗಳನ್ನು ಹೊಂದಿವೆ. ಕೊಪ್ಪಳದ ಕೋಟೆ ನೆಲಮಟ್ಟದಿಂದ 400' ಎತ್ತರದ ಗುಡ್ಡದ ಮೇಲಿದ್ದು ಅದನ್ನು ವಿನ್ಯಾಸ ಮತ್ತು ಭದ್ರತೆಯ ದೃಷ್ಟಿಯಿಂದ ಐರೋಪ್ಯ ದಂಡನಾಯಕರೂ ಮೆಚ್ಚಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕೌರೂರು, ಬಳಂಗೆರೆ, ಆಳವಂಡಿ, ತಳಕಲ್ಲು, ಆನೆಗೊಂದಿ, ಮುನಿರಾಬಾದ್ ಮೊದಲಾದ ಪ್ರೇಕ್ಷಣೀಯ ಸ್ಥಳಗಳಿವೆ. ಸ್ತ್ರೀ ದೇವತೆಗಳ ಆರಾಧನೆ ಅತ್ಯಂತ ಪೂರ್ವಕಾಲದಿಂದಲೂ ಬಂದ ಬಳುವಳಿ. ಕುಕನೂರಿನ ಮಹಾಮಾಯ, ಜೇಷಾವಿದೇವಿ, ಸಂಕನೂರಿನ ಸಂಕಲಾದೇವಿ, ಹೊಸೂರಿನ ಮಹಾಮಾಯಾ, ಹುಲಿಗಿಯ ಹುಲೆಗೆಮ್ಮ ಇವು ಪ್ರಸಿದ್ಧ ಶಕ್ತಿ ದೇವತೆಗಳು. ಕುಷ್ಟಗಿಯ ಅಡವಿರಾಯನ ಜಾತ್ರೆ, ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರೆ, ಕನಕಗಿರಿ ಜಾತ್ರೆ, ಯಲಬುರ್ಗ ತಾಲ್ಲೂಕಿನ ಕಲ್ಲೂರ ಕಲ್ಲೀನಾಥೇಶ್ವರ ಕಾರ್ತಿಕೋತ್ಸವ ಜಾತ್ರೆ, ಮಂಗಳೂರಿನ ಮಂಗಳೇಶ್ವರ ಜಾತ್ರೆ, ಗುತ್ತೂರು ಮಾರುತೇಶ್ವರ ಜಾತ್ರೆ, ಕುಕನೂರ ತಾಲೂಕಿನ ಗುದ್ನೇಪ್ಪನಮಠದ ಗುದ್ನೇಶ್ವರ ಜಾತ್ರೆ, ಚಂಡೂರಿನ ಆಂಜನೇಯಸ್ವಾಮಿ ಕಾರ್ತಿಕೋತ್ಸವ ಗಜೇಂದ್ರಗಡದ ಕಾಲಕಾಲೇಶ್ವರ ಕಾರ್ತಿಕೋತ್ಸವ ಮತ್ತು ಜಾತ್ರೆ ಹಾಗೂ ಅಲ್ಲೇ ಸ್ವಲ್ಪ ಮುಂದೆ ಕಣವಿ ವೀರಭದ್ರೇಶ್ವರ ಜಾತ್ರೆಗಳು ಭಕ್ತಾದಿಗಳನ್ನು ಆಕರ್ಷಿಸುತ್ತವೆ. ಶಾಸ್ತ್ರೀಯ ಸಂಗೀತ ಇಲ್ಲಿ ಹೆಚ್ಚು ಜನಪ್ರಿಯ; ದಾಸ ಪರಂಪರೆಯೂ ಉಂಟು. ಪ್ರಾಚೀನ ಕಾಲದಿಂದಲೂ ಸಾಹಿತ್ಯ ರಚನೆಗೆ, ಕವಿಪಂಡಿತರಿಗೆ ಹೆಸರುವಾಸಿ. ಇತ್ತೀಚಿನ ಸಾರಸ್ವತ ಲೋಕದ ಹಲವಾರು ಸಾಧಕರು ಇಲ್ಲಿನವರು. ಇವರಲ್ಲಿ ಸಿದ್ದಯ್ಯ ಪುರಾಣಿಕ, ಕಲ್ಲೂರಿನ ಪ. ಪೂಜ್ಯ ಕವಿಶ್ರೀ ಡಾ. ಪಂ ಕಲ್ಲಯ್ಯಜ್ಜನವರು ಶ್ರೀ ವೀರೇಶ್ವರ ಪುಣ್ಯಾಶ್ರಮ ಗದಗ, ಹಾಗೂ ಕವಿ ರಾಜಾಸಾಹೇಬ ಕುಕನೂರ ಸಾ. ಕಲ್ಲೂರ. ಪಾಂಡುರಂಗರಾವ್ ದೇಸಾಯಿ, ಜಯತೀರ್ಥ ರಾಜಪುರೋಹಿತ, ಇಟಗಿ ರಾಘವೇಂದ್ರ, ಕುಷ್ಟಗಿ ರಾಘವೇಂದ್ರರಾವ್, ದೇವೇಂದ್ರ ಕುಮಾರ ಹಕಾರಿ, ಎಚ್.ಎಸ್.ಪಾಟೀಲ, ಬಿ.ಆರ್.ತುಬಾಕಿ, ಗವಿಸಿದ್ದ ಬಳ್ಳಾರಿ, ನಾ.ಭ.ಶಾಸ್ತ್ರಿ,ಕೀರ್ತನಕೇಸರಿ ಜಯರಾಮಾಚಾರ್ಯ, ಮಾಧವರಾವ್ ಮುಧೋಳ (ಉರ್ದು ಮತ್ತು ಕನ್ನಡ ಭಾಷೆಗಳೆರಡರಲ್ಲೂ ಪರಿಣಿತಿ ಪಡೆದಿದ್ದರು. ಉರ್ದು-ಕನ್ನಡ ನಿಘಂಟಿನಲ್ಲಿ ಇವರು ಕೆಲಸಮಾಡಿದ್ದರು) ಮೊದಲಾದವರನ್ನು ಇಲ್ಲಿ ಹೆಸರಿಸಬಹುದು. ತಾಲ್ಲೂಕು ಮತ್ತು ಪಟ್ಟಣವಾಗಿ ಕೊಪ್ಪಳ ಕೊಪ್ಪಳ ತಾಲ್ಲೂಕು ಹಾಗೂ ಅದರ ಮುಖ್ಯ ಪಟ್ಟಣ. ದಕ್ಷಿಣಕ್ಕೆ ತುಂಗಭದ್ರಾ ಜಲಾಶಯ, ಪಶ್ಚಿಮಕ್ಕೆ ಗದಗ ಜಿಲ್ಲೆ, ಉತ್ತರಕ್ಕೆ ಯಲಬುರ್ಗ ತಾಲ್ಲೂಕು ಮತ್ತು ಪೂರ್ವಕ್ಕೆ ಗಂಗಾವತಿ ತಾಲ್ಲೂಕು ಇವೆ. ಕೊಪ್ಪಳ, ಇರಕಲ್ಲಗಡ, ಹಿಟ್ನಾಳ ಮತ್ತು ಅಳವಂಡಿ ಈ ನಾಲ್ಕು ಹೋಬಳಿಗಳಿವೆ. 156 ಹಳ್ಳಿಗಳಿವೆ. ತಾಲ್ಲೂಕಿನ ಒಟ್ಟು ವಿಸ್ತೀರ್ಣ 1,378.6ಚ.ಕಿಮೀ. ತಾಲ್ಲೂಕಿನ ಬಹುಭಾಗ ಕಪುಮೆಕ್ಕಲು ಮಣ್ಣಿನ ಮಟ್ಟಸ ಪ್ರಸ್ಥಭೂಮಿ. ತಾಲ್ಲೂಕಿನ ಈಶಾನ್ಯ ಮತ್ತು ಕೊಪ್ಪಳ ಪಟ್ಟಣದ ಸಮೀಪದಲ್ಲಿ ಗುಡ್ಡಗಳಿವೆ. ತುಂಗಭದ್ರಾನದಿ ತಾಲ್ಲೂಕಿನ ದಕ್ಷಿಣದ ಗಡಿಯಾಗಿತ್ತು. ಈಗ ತುಂಗಭದ್ರಾ ಜಲಾಶಯದ ಹರವಿನಲ್ಲಿ ಆ ಅಂಚಿನ ಭಾಗಗಳು ಮುಳುಗಿವೆ. ತುಂಗಭದ್ರಾ ಅಣೆಕಟ್ಟಿರುವುದು ತಾಲ್ಲೂಕಿನ ಆಗ್ನೇಯದಲ್ಲಿ ಮುನಿರಾಬಾದ್ ಬಳಿ. ತಾಲ್ಲೂಕಿನ ವಾರ್ಷಿಕ ಸರಾಸರಿ ಮಳೆ 594.65ಮಿಮೀ. ಕೃಷಿ ತಾಲ್ಲೂಕಿನ ಮುಖ್ಯ ಜೀವನೋಪಾಯ. ಸಾಗುವಳಿಯಾಗುತ್ತಿರುವ ಒಟ್ಟು 3,40,592 ಎಕರೆಗಳಲ್ಲಿ 5,285ಕ್ಕೂ ಹೆಚ್ಚು ಎಕರೆಗಳಿಗೆ ನೀರಾವರಿ ಸೌಲಭ್ಯವಿದೆ (ಕಾಲುವೆಯಿಂದ 4,702 ಎಕರೆಗಳು, ಬಾವಿಗಳಿಂದ 285 ಎಕರೆಗಳು, ಇತರ ಮೂಲಗಳಿಂದ 150 ಎಕರೆಗಳು). ಜೋಳ (51,940), ನೆಲಗಡಲೆ (37,005), ಹತ್ತಿ (27,835), ಗೋದಿ (7,200), ತೊಗರಿ (5,562), ಬಾಜ್ರ (4,593), ಬತ್ತ (2,942), ಕಬ್ಬು (2,583), ಹುರುಳಿ (1,320), ಹರಳು (260) ಮುಖ್ಯ ಬೆಳೆಗಳು. ಕೊಪ್ಪಳದಿಂದ 13ಕಿಮೀ ದೂರದಲ್ಲಿರುವ ಕಿನ್ನಾಳ ಗ್ರಾಮ ಮರದ ಕುಶಲ ಕೈಗಾರಿಕೆಗಳಿಗೆ ಪ್ರಸಿದ್ಧವಾಗಿದೆ. ಇಲ್ಲಿನ ಕೆಲವು ಚಿತ್ರಗಾರ ಮನೆತನದವರು ಉತ್ತಮವಾಗಿ ರಚಿಸಿ ಬಣ್ಣಹಾಕಿದ ದೇವವಿಗ್ರಹಗಳು, ಪ್ರಾಣಿಗಳ ಬೊಂಬೆಗಳು, ಹಣ್ಣು ತರಕಾರಿಗಳ ತದ್ರೂಪ ಬೊಂಬೆಗಳು, ನಾಟಕಗಳಲ್ಲಿ ಬಳಸುವ ಕಿರೀಟ, ಮುಖವಾಡ, ತೊಟ್ಟಿಲು, ಪೀಠಗಳನ್ನು ತಯಾರಿಸುತ್ತಾರೆ. ನೇಯ್ಗೆ, ಕೊಂಬಿನಿಂದ ಬಾಚಣಿಗೆಯ ತಯಾರಿಕೆ ಈ ಮೊದಲಾದ ಉದ್ಯಮಗಳೂ ಇಲ್ಲಿವೆ. ತುಂಗಭದ್ರಾ ನದಿಯ ಉಪನದಿಯಾದ ಹಿರೇಹಳ್ಳದ ಎಡದಂಡೆಯ ಮೇಲಿರುವ ಕೊಪ್ಪಳ ಈ ತಾಲ್ಲೂಕಿನ ಮುಖ್ಯ ಪಟ್ಟಣ. ಜನಸಂಖ್ಯೆ 56,145. ಇದು ತಾಲ್ಲೂಕಿನ ವಾಣಿಜ್ಯ, ಕೈಗಾರಿಕೆ ಮತ್ತು ವಿದ್ಯಾಕೇಂದ್ರ ಹಾಗೂ ಹುಬ್ಬಳ್ಳಿ ಗುಂತಕಲ್ಲು ರೈಲುಮಾರ್ಗದ ಒಂದು ನಿಲ್ದಾಣ. ಬಳ್ಳಾರಿ, ಕುಷ್ಪಗಿ, ಹುಬ್ಬಳ್ಳಿ, ಯಲಬುರ್ಗ, ಗಂಗಾವತಿಗಳಿಗೆ ರಸ್ತೆ ಸಂಪರ್ಕವಿದೆ. ಕೈಮಗ್ಗದ ಬಟ್ಟೆಗಳಿಗೆ ಇದು ಪ್ರಸಿದ್ಧ. ವಾರ್ಷಿಕವಾಗಿ ಜನವರಿಯಲ್ಲಿ ಗವಿಸಿದ್ದೇಶ್ವರ ಜಾತ್ರೆ ನಡೆಯುತ್ತದೆ. ಈ ಪಟ್ಟಣದ ಪಶ್ಚಿಮಕ್ಕೆ ಬೆಟ್ಟಗಳ ಸಾಲು ಹಬ್ಬಿದೆ. ಇವುಗಳಲ್ಲಿ ಪಾಲ್ಕಿ ಗುಂಡು ಅತ್ಯಂತ ಎತ್ತರವಾದ್ದು (2339'). ಪೂರ್ವಕ್ಕಿರುವ ಬೆಟ್ಟಗಳ ಸಾಲಿನಲ್ಲಿ ಗವಿಮಠವಿದೆ. ದಕ್ಷಿಣಕ್ಕೆ ಮತ್ತೊಂದು ಬೆಟ್ಟದ ಸಾಲು ಇದೆ. ಅದನ್ನು ಬಹದ್ದೂರ್ ಬಂಡೆ (1980') ಎನ್ನುತ್ತಾರೆ. ಗವಿಮಠ ಬೆಟ್ಟದಲ್ಲಿ ನಾಲ್ಕು ಗವಿಗಳಿವೆ. ಅಲ್ಲದೆ ಪುರಾತನವಾದ ವೀರಶೈವ ಮಠ ಮತ್ತು ಜೈನಸಮಾದಿsಗಳೂ ಇವೆ. ಪಾಲ್ಕಿಗುಂಡಿನ ಪಶ್ಚಿಮಕ್ಕಿರುವ ಮಲಿಮಲ್ಲಪ್ಪನ ಬೆಟ್ಟದಲ್ಲಿ ಮೋರಿಯರ ಅಂಗಡಿ ಎಂದು ಕರೆಯುವ ಬೃಹತ್ ಶಿಲಾಯುಗೀನ ಕಲ್ಮನೆ ಸಮಾದಿsಗಳಿವೆ. ಅಶೋಕನ ಎರಡು ಲಘುಪ್ರಸ್ತರ ಧರ್ಮಶಾಸನಗಳು ಸಿಕ್ಕಿದ್ದು ಗವಿಮಠ ಮತ್ತು ಪಾಲ್ಕಿಗುಂಡು ಬೆಟ್ಟಗಳಲ್ಲಿ. ಇವುಗಳಿಂದ ಕೊಪ್ಪಳ ಕ್ರಿ.ಪೂ.3ನೆಯ ಶತಮಾನದಷ್ಟು ಪ್ರಾಚೀನವಾದ್ದೆಂದು ಊಹಿಸಬಹುದು. ಕ್ರಿ.ಶ.9ನೆಯ ಶತಮಾನದಿಂದ 13ನೆಯ ಶತಮಾನದವರೆಗಿನ ಹಲವು ಶಿಲಾಶಾಸನಗಳೂ ಅನಂತರದ ಮುಸ್ಲಿಂ ದಾಖಲೆಗಳೂ ದೊರಕಿವೆ. ಕೊಪಣಪುರವರಾದಿsೀಶ್ವರರಾದ ಶಿಲಾಹಾರರ ಒಂದು ಶಾಖೆಗೆ ಇದು ರಾಜಧಾನಿಯಾಗಿದ್ದಿರಬಹುದು. ಗಂಗ ಮತ್ತು ಕಲ್ಯಾಣದ ಚಾಳುಕ್ಯರ ಕಾಲದಲ್ಲಿ ಕೊಪ್ಪಳ ಮುಖ್ಯ ಕೇಂದ್ರವಾಗಿದ್ದಿರಲೂಬಹುದು. ಇದನ್ನು ಶಾಸನ ಮತ್ತು ಸಾಹಿತ್ಯಗಳಲ್ಲಿ ಕೊಪಣ, ಕುಪಣ, ಕುಪಿನ ಎಂದು ಕರೆದಿರುವುದಲ್ಲದೆ, ಆದಿತೀರ್ಥ, ಮಹಾತೀರ್ಥ,ವಿದಿತ ಮಹಾ ಕೊಪಣನಗರಮುಂತಾಗಿ ಬಣ್ಣಿಸಲಾಗಿದೆ. ಒಂದು ಕಾಲದಲ್ಲಿ ಪ್ರಸಿದ್ಧ ಜೈನಕ್ಷೇತ್ರವಾಗಿತ್ತು. ಇಲ್ಲಿ 722 ಬಸದಿಗಳೂ 24 ಜೈನಸಂಘಗಳೂ ಇದ್ದುವೆಂದು ಹೇಳಲಾಗಿದೆ.ಇಲ್ಲಿ ಅನೇಕ ಜೈನಶಾಸನಗಳೂ ದೊರೆತಿವೆ. ಇತಿಹಾಸಪ್ರಸಿದ್ಧವಾದ ಕೊಪ್ಪಳದ ಕೋಟೆಯನ್ನು ಕಟ್ಟಿದವರು ಯಾರೆಂಬುದು ತಿಳಿದಿಲ್ಲ. ಟಿಪ್ಪುಸುಲ್ತಾನ 1786ರಲ್ಲಿ ಇದನ್ನು ವಶಪಡಿಸಿಕೊಂಡು, ಫ್ರೆಂಚ್ ಶಿಲ್ಪಿಗಳ ನೆರವಿನಿಂದ ಇನ್ನೂ ಭದ್ರ ಪಡಿಸಿದನೆಂದು ತಿಳಿದುಬರುತ್ತದೆ. ಕಡಿದಾದ ಮೆಟ್ಟಿಲುಗಳನ್ನೊಳ ಗೊಂಡಿದೆ. ದಕ್ಷಿಣ ಭಾರತದ ದುರ್ಗಮ ಕೋಟೆಗಳಲ್ಲಿ ಕೊಪ್ಪಳ ಕೋಟೆಯೂ ಒಂದು. ಈ ಕೋಟೆಯನ್ನು 1790ರಲ್ಲಿ ಇಂಗ್ಲಿಷ್ ಮತ್ತು ನಿಜಾಮಿ ಪಡೆಗಳು ಸತತವಾಗಿ ಮುತ್ತಿಗೆ ಹಾಕಿದ್ದುಂಟು. 1858ರಲ್ಲಿ ಈ ದುರ್ಗ ಮುಂಡರಗಿ ಬಿsೀಮರಾಯನ ವಶದಲ್ಲಿತ್ತು. 1949ರ ವರೆಗೆ ಕೊಪ್ಪಳ ನವಾಬ್ ಸಾಲಾರ್‍ಜಂಗನ ಜಹಗೀರಿಯಾಗಿತ್ತು. (ಜೆ.ಆರ್.ಪಿ.;ಎಚ್.ಆರ್.ಆರ್.ಬಿ.) ಕೊಪ್ಪಳ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಖ್ಯ ಪಾತ್ರವಹಿಸಿತ್ತು. ಸಂಗ್ರಾಮದ ಜ್ವಾಲೆ 1858ರಲ್ಲಿ ಮುಂಡರಗಿ ಭೀಮರಾಯ ಹಾಗೂ ಹಮ್ಮಿಗೆ ಕೆಂಚನಗೌಡ ಇವರ ಹೋರಾಟದಿಂದಲೇ ಪ್ರಾರಂಭವಾಯಿತೆನ್ನಬಹುದು. ಹೈದರಾಬಾದು ಕರ್ನಾಟಕದಲ್ಲಿ ಕೊಪ್ಪಳ ಭಾಗದಲ್ಲಿಯೇ ಮೊದಲಿಗೆ ರಾಜಕೀಯ ಚಟುವಟಿಕೆಗಳು ಕಂಡುಬಂದವು. ಬಹಳ ಮೊದಲೇ ಕೀರ್ತನಕೇಸರಿ ಜಯರಾಮಾಚಾರ್ಯರು ಪುರಾಣದ ಕಥೆಗಳಿಗೆ ರಾಜಕೀಯ ರಂಗು ಕೊಟ್ಟು ಸ್ಫೂರ್ತಿ ಹುಟ್ಟುವಂತೆ ಸ್ವಚ್ಫಂದ ಶೈಲಿಯಲ್ಲಿ ಕೀರ್ತನಗಳನ್ನು ಹೇಳತೊಡಗಿ ಕರ್ನಾಟಕದಲ್ಲೆಲ್ಲ ಅಸಹಕಾರ, ಕಾಯಿದೆ ಭಂಗ, ಖಾದಿ ಪ್ರಚಾರ, ನಿದಿsಸಂಗ್ರಹಗಳಿಗಾಗಿ ಅದನ್ನು ಬಳಸಿಕೊಡರು. ಪುಟ್ಟಾಭಟ್ಟ ಜಹಗೀರದಾರ ಮತ್ತು ಹೊಸಪೇಟೆಯ ಚಕ್ರಪಾಣಿ ಆಚಾರ್ಯರು ಈ ಭಾಗದಲ್ಲಿ ಖಾದಿ ಪ್ರಚಾರ ಮಾಡಿದರು. ಇಲ್ಲಿಯವರಾದ ಬಸವಂತರಾವ್ ಕಾಟರಹಳ್ಳಿ ಮತ್ತು ಹಿರೇಮಠ ಅವರು ಹೈದರಾಬಾದಿನಲ್ಲಿ ಪೆÇೀಲಿಸರ ಕಣ್ಣುತಪ್ಪಿಸಿ ರಾಷ್ಟ್ರಧ್ವಜ ಹಾರಿಸಿದರು. 1928ರಷ್ಟು ಮಂಚೆಯೇ ಕಾಂಗ್ರೆಸ್ಸನ್ನು ಸೇರಿದವರಲ್ಲಿ ಪ್ರಮುಖರೆಂದರೆ ಕೊಪ್ಪಳದವರಾದ ಎಚ್.ಕೊಟ್ರಪ್ಪ, ಹಂಪಿ ನರಸಿಂಗರಾವ್ ಮತ್ತು ಸಿರೂರು ವೀರಭದ್ರಪ್ಪನವರು. ನಿಜಾಮ್ ಮತ್ತು ಬ್ರಿಟಿಷ್ ಸರ್ಕಾರ ಇವರಿಗೆ ಬಹಳ ತೊಂದರೆ ಕೊಟ್ಟಿತ್ತು. 1938ರಲ್ಲಿ ಹೈದರಾಬಾದಿನಲ್ಲಿ ನಡೆದ ವಂದೇ ಮಾತರಂ ವಿದ್ಯಾರ್ಥಿ ಆಂದೋಲನದಲ್ಲಿ ಮತ್ತು 1941ರಲ್ಲಿ ನಡೆದ ವೈಯಕ್ತಿಕ ಸತ್ಯಾಗ್ರಹದಲ್ಲಿ ಕೊಪ್ಪಳದ ವಿದ್ಯಾರ್ಥಿ ಮುಖಂಡ ಇಟಗಿ ವಿರೂಪಾಕ್ಷಯ್ಯನವರ ನೇತೃತ್ವದಲ್ಲಿ ಅನೇಕರು ಸೆರೆಮನೆ ಸೇರಿದರು. ಈ ಭಾಗದಲ್ಲಿದ್ದ ಕುಕನೂರಿನ ವಿದ್ಯಾವಂತ ಗುರುಕುಲ ಅದರ ಸಂಸ್ಥಾಪಕರಾದ ರಾಘವೇಂದ್ರರಾವ್ ದೇಸಾಯಿ ಅವರ ಮುಂಧೋರಣೆಯಿಂದ ರಾಜಕೀಯ ಜಾಗೃತಿಯಲ್ಲಿ ಬಹಳ ಮಹತ್ವದ ಪಾತ್ರ ವಹಿಸಿತು. ಈ ಹೊತ್ತಿಗೆ ನಗರದ ಪ್ರಮುಖ ವಕೀಲರನೇಕರು ರಾಜಕೀಯದಲ್ಲಿ ದುಮುಕಿದರು. ಹಳ್ಳಿಹಳ್ಳಿಗಳಲ್ಲಿ ವಾಚನಾಲಯಗಳು ಸ್ಥಾಪನೆಯಾದವು. ಚಲೇಜಾವ್ ಚಳವಳಿಯಿಂದಾರಂಬಿsಸಿ ಸ್ವಾತಂತ್ರ್ಯದವರೆಗೆ ಈ ಭಾಗದಲ್ಲಿ ಆದ ಹೆಚ್ಚಿನ ಜಾಗೃತಿ ಮುಖಂಡರಾದ ಜನಾರ್ದನರಾವ್ ದೇಸಾಯಿ (ವಕೀಲರು), ಪ್ರಾಣೇಶಾಚಾರ್ ಮುಂತಾದವರ ಲಕ್ಷ್ಯವನ್ನು ಸೆಳೆಯಿತು. ತಂಡತಂಡವಾಗಿ ಸತ್ಯಾಗ್ರಹಿಗಳು ಕೊಪ್ಪಳಕ್ಕೆ ಬಂದು ಸೆರೆಯಾದರು. ಭಾರತ ಸ್ವತಂತ್ರವಾದರೂ ಇನ್ನೂ ಜಾಗೀರಾಗಿ ಉಳಿದಿದ್ದ ಕೊಪ್ಪಳ ಭಾಗದಲ್ಲಿ ಅನೇಕ ಕಡೆ ಜನರು ರಾಷ್ಟ್ರಧ್ವಜವನ್ನು ಹಾರಿಸಿ ಸ್ವಾತಂತ್ರ್ಯ ಘೂೀಷಿಸಿ ಮತ್ತೆ ಸೆರೆಮನೆಗೆ ಹೋದರು. ಈ ಚಳವಳಿಯೇ ಪ್ರಬಲವಾಗಿ ಹೈದರಾಬಾದ್ ಸ್ವಾತಂತ್ರ್ಯಾಂದೋಳನದ ಸ್ವರೂಪ ತಳೆಯಿತು. ಚಳವಳಿ ಹೆಚ್ಚಿದಂತೆ ನಿಜಾಮರ ದಬ್ಬಾಳಿಕೆ ಹೆಚ್ಚಾದಾಗ ಕೊಪ್ಪಳ ಭಾಗದಿಂದ ಜೇಲು ಸೇರಿದ ಬೆಣಕಲ್ ಬಿsೀಮಸೇನರಾವ್ ಎಂಬ ತರುಣ ಸತ್ಯಾಗ್ರಹಿ ಗುಲ್ಬರ್ಗ ಜೈಲಿನಲ್ಲಿ ನಡೆದ ಲಾಠಿ ಪ್ರಹಾರದಲ್ಲಿ ಮೃತನಾದ. ಜನ ರೊಚ್ಚಿಗೆದ್ದರು. ಗದಗಿನಲ್ಲಿ ಪ್ರಾದೇಶಿಕ ಸ್ಟೇಟ್ ಕಾಂಗ್ರೆಸ್ ಕೇಂದ್ರವನ್ನು ತೆರೆದರು. ನಿರಾಶ್ರಿತರಾಗಿ ಹೊರಬರುವ ಕುಟುಂಬಗಳ ವ್ಯವಸ್ಥೆ ಮಾಡಬೇಕಾಯಿತು. ಕೊಪ್ಪಳದ ಗಡಿಯ ಸುತ್ತ ಕಾಂಗ್ರೆಸಿನ ಕಾರ್ಯಕರ್ತರ ಸಶಸ್ತ್ರ ಶಿಬಿರಗಳು ಏರ್ಪಟ್ಟವು. ನಿಜಾಮರ ಪೆÇಲೀಸು, ಸೈನ್ಯ ಮತ್ತು ರಜಾಕಾರರ ವಿರುದ್ಧ ದಾಳಿ, ಕಚೇರಿಗಳ ನಾಶ ಮೊದಲಾದವು ನಡೆದವು. ಗಡಿಭಾಗದ ಅನೇಕ ಹಳ್ಳಿಗಳು ಸಂಪೂರ್ಣವಾಗಿ ಈ ಕಾರ್ಯಕರ್ತರ ಅದಿsೀನವಾದವು. ಹೀಗೆ ನಿಜಾಮರ ಸತ್ತೆಯನ್ನು ನಿಷ್ಕ್ರಿಯೆಗೊಳಿಸುವ ಆಂದೋಲನ ತೀವ್ರಗೊಂಡಾಗ ಭಾರತ ಸರ್ಕಾರದಿಂದ ಪೆÇಲೀಸ್ ಕಾರ್ಯಾಚರಣೆ ನಡೆದು ಹೈದರಾಬಾದಿನೊಂದಿಗೆ ಕೊಪ್ಪಳವೂ ಸ್ವತಂತ್ರವಾಯಿತು. ಉಲ್ಲೇಖ ಕವಿರಾಜ ಮಾರ್ಗದಲ್ಲಿ "ವಿದಿತ ಮಹಾ ಕೋಪಣ ನಗರ" ವೆಂದು ಕೊಪ್ಪಳದ ಬಗ್ಗೆ ಉಲ್ಲೇಖವಿದೆ. ಪ್ರಾಮುಖ್ಯತೆ ಅಶೋಕ ಚಕ್ರವರ್ತಿಯ ಶಿಲಾ ಶಾಸನಗಳು, ಶಿಲಾಯುಗದ ಜನರು ವಾಸಿಸುತ್ತಿದ್ದ ಗವಿಗಳು, ವಿಜಯನಗರ ಸಾಮ್ರಾಜ್ಯದ ಪ್ರಥಮ ರಾಜಧಾನಿ ಆನೆಗುಂದಿ, ಫ್ರೆಂಚರ ಸಹಾಯ ಪಡೆದು ಟಿಪ್ಪು ಸುಲ್ತಾನ ನಿರ್ಮಿಸಿದ ಕೊಪ್ಪಳಕೋಟೆ, ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಮರ್ದಾನ ದರ್ಗಾ, ಹಲವು ನೂರು ವರ್ಷಗಳಿಂದ ಕೋಮು ಸಾಮರಸ್ಯ, ಶಿಕ್ಷಣ ಮತ್ತು ಧರ್ಮ ಪ್ರಚಾರಕ್ಕಾಗಿ ಹೆಸರುವಾಸಿಯಾಗಿರುವ ಕೊಪ್ಪಳದ ಗವಿಮಠ, ಸುಪ್ರಸಿದ್ಧ ಕಿನ್ನಾಳ ಆಟಿಕೆ, ಇಟಗಿಯ ಮಹದೇವ ದೇವಸ್ಥಾನ ಹೀಗೆ ಹಲವಾರು ಕಾರಣಗಳಿಗಾಗಿ ಕೊಪ್ಪಳ ಜಿಲ್ಲೆ ಹೆಸರುವಾಸಿಯಾಗಿದೆ. ಪ್ರೇಕ್ಷಣೀಯ ಸ್ಥಳಗಳು ಇಂದಿನ ಆನೆಗೊಂದಿ, ಗಂಗಾವತಿ ತಾಲ್ಲೂಕಿನಲ್ಲಿದೆ. ಆನೆಗೊಂದಿಯಲ್ಲಿರುವ ಪ್ರೇಕ್ಷಣೀಯ ಸ್ಥಳಗಳೆಂದರೆ ಗಗನ ಅರೆಮನೆ, ಆನೆಗೊಂದಿ ಕೋಟೆ,ಪಂಪ ಸರೋವರ, 64 ಕಂಭಗಳಿರುವ ಕೃಷ್ಣದೇವರಾಯನ ಸಮಾಧಿ,ನವ ಬೃಂದಾವನ,ಮರದ ಮೇಲೆ ಮಾಡಿರುವ ಸೂಕ್ಷ್ಮ ಕೆತ್ತೆನೆಯಂತೆ, ಕಲ್ಲಿನ ಮೇಲೆ ಕೆತ್ತನೆ ಮಾಡಿರುವ ಗರ್ಭಗುಡಿಯಿರುವ ಶ್ರೀ ಗಣಪತಿ ದೇವಸ್ಥಾನ, ಶ್ರೀ ಗವಿ ರಂಗನಾಥ ದೇವಸ್ಥಾನ, ಶಿಲೆಯಲ್ಲಿ ಕೆತ್ತಿರುವ ಸಂಪೂರ್ಣ ರಾಮಾಯಣ ಮೊದಲಾದ ಅಪೂರ್ವ ಶಿಲ್ಪಕಲಾ ಕೆತ್ತನೆಯ ಬೀಡಾಗಿರುವ ಹುಚ್ಚಪ್ಪಯ್ಯನ ಮಠ ಮತ್ತು ಚಿಂತಾಮಣಿ ಶಿವನ ದೇವಸ್ಥಾನ. ಗಂಗಾವತಿ ತಾಲೂಕಿನಲ್ಲಿ, ಗಂಗಾವತಿಯಿಂದ ೧೩ ಮೈಲು ದೂರದಲ್ಲಿರುವ ಕನಕಗಿರಿಯನ್ನು ಮೊದಲು ಸ್ವರ್ಣಗಿರಿಯಂದು ಕರೆಯಲಾಗುತ್ತಿತು." ಕಾಲಿದ್ದವರು ಹಂಪಿ ನೋಡಬೇಕು, ಕಣ್ಣಿದ್ದವರು ಕನಕಗಿರಿ ನೋಡಬೇಕು" ಎಂಬ ನಾಣ್ಣುಡಿ ಇಲ್ಲಿ ಪ್ರಚಲಿತದಲ್ಲಿದೆ. ಶ್ರೀ ಕನಕಾಚಲಪತಿ ದೇವಸ್ಥಾನವು ವಿಜಯನಗರ ಕಾಲದ ವಾಸ್ತುಶಿಲ್ಪದ ಒಂದು ಉತ್ತಮ ಉದಾಹರಣೆಯಾಗಿದೆ.ಕನಕಗಿರಿಯ ಹೊರವಲಯದಲ್ಲಿ ರಾಜಾ ವೆಂಕಟಪ್ಪ ನಾಯಕ ನಿರ್ಮಿಸಿರುವ ರಾಜನ ಸ್ನಾನದ ಕೊಳವಿದೆ. ಕುಷ್ಟಗಿ ತಾಲೂಕಿನಲ್ಲಿ ತಾವರಗೇರಾದಿಂದ ೫ ಮೈಲಿ ದೂರದಲ್ಲಿರುವ ಊರು ಪುರಇಲ್ಲಿ ೧ ಕೋಟಿ ಲಿಂಗಗಳಿವೆ. ಇಲ್ಲಿ ಸುಪ್ರಸಿದ್ಧ ಸೋಮೇಶ್ವರ ದೇವಸ್ಥಾನದಲ್ಲಿ ಕೋಟಿ ಲಿಂಗಗಳಿದ್ದು, ಶ್ರಾವಣ ಮಾಸದಲ್ಲಿ ಜಾತ್ರೆ ನೆಡೆಯುತ್ತದೆ. ಕುಕನೂರು, ಇದು ಪ್ರಸಿದ್ಧ ಗ್ರಾನೈಟ್ ಉದ್ಯಮ ಕೇಂದ್ರವಾಗಿದೆ. ಸ್ವಾತಂತ್ರ್ಯಪೂರ್ವದಿಂದ ನೆಡೆಯುತ್ತಿರುವ ಪ್ರಸಿದ್ಧ [[vidayananda gurukul. ಕರ್ನಾಟಕದಲ್ಲಿ ನೆಡೆದ ಹೈದ್ರಾಬಾದ್ ಪ್ರಾಂತ್ಯ ವಿಮೋಚನಾ ಹೋರಾಟದಲ್ಲಿ ಕುಕನೂರು ಪೋಲಿಸ್ ಠಾಣೆಯ ಮೇಲೆ ಅನ್ನದಾನಯ್ಯ ಪುರಾಣಿಕ ನೇತ್ರತ್ವದಲ್ಲಿ ಮುಂಡರಗಿ ಶಿಬಿರದ ಯುವಕರು, ಯಶಸ್ಡಿ ದಾಳಿ ನೆಡೆಸಿ ನಿಜಾಂ ಪೋಲಿಸರು ಮತ್ತು ರಜಾಕಾರರನ್ನು ಸೋಲಿಸಿದ ಘಟನೆ, ಹೈದರಾಬಾದು ಪ್ರಾಂತ್ಯ ವಿಮೋಚನಾ ಹೋರಾಟಕ್ಕೆ ಹೊಸ ತಿರುವನ್ನು ನೀಡಿತು. ಕುಕನೂರಿನಲ್ಲಿರುವ ಮಹಾಮಾಯಾ ದೇವಸ್ಥಾನವು, ಈ ಭಾಗದ ಜನರ ನಂಬಿಕೆಯಂತೆ ಕೊಲ್ಹಾಪುರದ ಮಹಾಲಕ್ಷ್ಮಿಯ ವಾಸಸ್ಥಾನವಾಗಿದೆ. ಭಾಗ್ಯನಗರ, ಇದು ಕೊಪ್ಪಳ ನಗರದ ಭಾಗವಾಗಿದ್ದು, ಸೀರೆ ಮತ್ತು ಉಡುಪುಗಳ ನೇಯ್ಗೆಗೆ ಪ್ರಸಿದ್ಧವಾಗಿದೆ. ರಾಜ್ಯದಲ್ಲಿ, ಮಾನವರ ತಲೆಕೂದಲನ್ನು ತಿರುಪತಿ ಮೊದಲಾದ ಕಡೆಯಿಂದ ಸಂಗ್ರಹಿಸಿ, ವ್ಯಾಪಾರ ಮಾಡುವ ಕೇಂದ್ರವೆಂದೂ ಇದು ಪ್ರಸಿದ್ಧವಾಗಿದೆ ಇಟಗಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲುಕಿನ ಇಟಗಿಯಲ್ಲಿ "ದೇವಾಲಯಗಳ ಚರ್ಕವರ್ತಿ" ಎಂಬ ಬಿರುದಾಂಕಿತ ಶ್ರೀ ಮಹಾದೇವ ದೇವಾಲಯವಿದೆ .ಇದು ಕೊಪ್ಪಳದಿಂದ ೨೦ ಕಿ.ಮೀ. ದೂರದಲ್ಲಿದೆ . ಕುಕನೂರಿನಿಂದ ೭ ಕಿ.ಮೀ, ದೂರದಲ್ಲಿದೆ. ಈ ದೇವಾಲಯವನ್ನು ಕಲ್ಯಾಣಿಚಾಲುಕ್ಯರ್ ಪ್ರಸಿದ್ಧ ದೊರೆಯಾದ ೬ನೇ ವಿಕ್ರಮಾದಿತ್ಯನ ಸಾಮಂತನಾಗಿದ್ದ "ಮಹಾದೇವ ದಂಡನಾಯಕ " ಈ ದೇವಾಲಯವನ್ನು ಕಟ್ಟಿಸಿದ್ದಾನೆ. ಕಲ್ಲೂರ ಈ ಪ್ರಸಿದ್ಧ ಕ್ಷೇತ್ರ ಯಲಬುರ್ಗಾ ತಾಲೂಕಿನ 'ಕಲ್ಲೂರ'ನಲ್ಲಿ ಕಲ್ಯಾಣಿಚಾಲುಕ್ಯರ್ ಪ್ರಸಿದ್ಧ ದೊರೆಯಾದ ೬ನೇ ವಿಕ್ರಮಾದಿತ್ಯನು ಕಟ್ಟಿಸಿದನೆಂಬ ಆಧಿ ೮-೯ ಶತಮಾನದ ಕಾಳಮುಖ ಶೈವ ಪರಂಪರೆಯ ಪ್ರಸಿದ್ಧ ಶಿಕ್ಷಣ ಕೇಂದ್ರ ಶ್ರೀ ಕಲ್ಲಿನಾಥೇಶ್ವರ ದೇವಸ್ಥಾನವೂ ಇಲ್ಲಿದೆ. ಇದನ್ನೂ ನೋಡಿ ಕೊಪ್ಪಳ (ಲೋಕ ಸಭೆ ಚುನಾವಣಾ ಕ್ಷೇತ್ರ) ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ ಕರ್ನಾಟಕದ ಜಿಲ್ಲೆಗಳು ಕೊಪ್ಪಳ ಜಿಲ್ಲೆ ಕರ್ನಾಟಕ
1076
https://kn.wikipedia.org/wiki/%E0%B2%89%E0%B2%A4%E0%B3%8D%E0%B2%A4%E0%B2%B0%20%E0%B2%95%E0%B2%A8%E0%B3%8D%E0%B2%A8%E0%B2%A1
ಉತ್ತರ ಕನ್ನಡ
ಉತ್ತರ ಕನ್ನಡ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಂದು. ಈ ಜಿಲ್ಲೆ ಗೋವಾ ರಾಜ್ಯ, ಬೆಳಗಾವಿ, ಧಾರವಾಡ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳೊಂದಿಗೆ ತನ್ನ ಗಡಿಗಳನ್ನು ಹಂಚಿಕೊಂಡಿದೆ. ಪಶ್ಚಿಮಕ್ಕೆ ಅರಬ್ಬೀ ಸಮುದ್ರ ವಿದೆ. ಬಹುತೇಕ ಅರಣ್ಯಪ್ರದೇಶದಿಂದ ಕೂಡಿರುವ ಉತ್ತರಕನ್ನಡ ಜಿಲ್ಲೆ, ತನ್ನ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಅನೇಕ ಸುಂದರ ಜಲಪಾತಗಳಿವೆ. ಕರ್ನಾಟಕದ ಪ್ರಖ್ಯಾತ ಜಾನಪದ ಕಲೆ "ಯಕ್ಷಗಾನ" ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆ ಸಾಕಷ್ಟು ಹೆಸರು ಮಾಡಿದೆ. ಅದಲ್ಲದೇ, ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಸಿ ಕರ್ನಾಟಕದ ದಾಂಡೀ ಎಂದು ಕರೆಸಿಕೊಳ್ಳೂವ ಅಂಕೋಲಾ ಕೂಡ ಈ ಜಿಲ್ಲೆಗೇ ಸೇರಿದೆ.ಇಲ್ಲಿಯ ಜನಸಂಖ್ಯೆ ೨೦೧೧ ರ ಜನಗಣತಿಯಂತೆ ೧೪,೩೭,೧೬೯ ಇದ್ದು ಇದರಲ್ಲಿ ಪುರುಷರು ೭,೨೬,೨೫೬ ಹಾಗೂ ಮಹಿಳೆಯರು ೭,೧೦,೯೧೩). ದಿನಕರ ದೇಸಾಯಿಯವರು ಉತ್ತರ ಕನ್ನಡವನ್ನು ವರ್ಣಿಸಿ ಬರೆದಿರುವ ಚುಟುಕ: ಒಂದು ಬದಿ ಸಹ್ಯಾದ್ರಿ, ಒಂದು ಬದಿ ಕಡಲು ನಡು ಮಧ್ಯದಲಿ ಅಡಕೆ ತೆಂಗುಗಳ ಮಡಲು ಸಿರಿಗನ್ನಡದ ಚಪ್ಪರವೆ ನನ್ನ ಜಿಲ್ಲೆ ಇಲ್ಲಿಯೇ ಇನ್ನೊಮ್ಮೆ ಹುಟ್ಟುವೆನು ನಲ್ಲೆ ಸಿರ್ಸಿ ಜಾತ್ರೆ ಭಾರತದ ಅತಿದೊಡ್ಡ ಜಾತ್ರೆ ಸುಪ್ರಸಿದ್ಧ ಸಿರ್ಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಪ್ರತಿ ಎರಡು ವರ್ಷಗಳಿಗೊಮ್ಮೆ ಸರ್ವತ್ರ ಸುಭಿಕ್ಷಾರ್ಥವಾಗಿ ಧಾರ್ಮಿಕ ಪರಂಪರೆಯಂತೆ ಪೂಜಾ-ಉತ್ಸವಗಳಿಂದೊಡಗೂಡಿದ ಶ್ರೀ ಮಾರಿಕಾಂಬಾ ಜಾತ್ರೆಯನ್ನು ಅತೀ ವಿಜ್ರಂಭಣೆಯಿಂದ ನಡೆಸಲಾಗುತ್ತದೆ. ಇದು ಭಾರತದಲ್ಲಿಯೇ ಅತೀದೊಡ್ಡ ಜಾತ್ರೆ, ಈ ಜಾತ್ರೆಗೆ ದೇಶದ ಮೂಲೆ ಮೂಲೆಗಳಿಂದ ಭಕ್ತಸಾಗರ ಹರಿದು ಬರುತ್ತದೆ. ಅನೇಕಾನೇಕ ಮನರಂಜನಾ ಕಾರ್ಯಕ್ರಮಗಳು ಜಾನಪದ ಕಲೆಗಳ ಪ್ರದರ್ಶನಗಳು, ರಸ್ತೆಯ ಬದಿಗಳಲ್ಲಿ ಬಗೆ ಬಗೆಯ ಅಂಗಡಿ ಮುಗ್ಗಟ್ಟುಗಳು, ಝಗ ಝಗಿಸುವ ದೀಪದ ಅಲಂಕಾರಗಳು ಜಾತ್ರೆಯ ಸೊಬಗನ್ನು ಹೆಚ್ಚಿಸುತ್ತವೆ. ವಿಧಿ ವಿಧಾನಗಳು ಸಿರ್ಸಿಯ ಜಾತ್ರೆ ೯ ದಿನಗಳ ಕಾಲ ಜರುಗುವ ಅದ್ದೂರಿ ಜಾತ್ರೆ ಇಲ್ಲಿ ಜಾತ್ರೆ ಪ್ರಾರಂಭ ಆಗುವ ಎರಡು ತಿಂಗಳು ಮೊದಲಿನಿಂದಲೆ ಜಾತ್ರೆಯ ವಿಧಿ ವಿಧಾನಗಳು ಪ್ರಾರಂಭವಾಗುತ್ತವೆ. ಜಾತ್ರೆಯ ಮುಹೂರ್ತ ನಿಶ್ಚಯಿಸಲು ಪುಷ್ಯ ಮಾಸದ ಒಂದು ದಿನ ವಿಶೇಷ ಸಭೆ ಕರೆಯಲಾಗುತ್ತದೆ. ಈ ಸಭೆಯಲ್ಲಿ ಊರಿನ ಗಣ್ಯರು, ಸಾರ್ವಜನಿಕರು,ಬಾಬುದಾರರು, ಧರ್ಮದತ್ತಿ ಗಳು ಭಾಗವಹಿಸಿರುತ್ತಾರೆ. ಜಾತ್ರೆಯ ದಿನ ನಿಗದಿಯಾದ ನಂತರ ಸಂಪ್ರದಾಯದಂತೆ ಜಾತ್ರೆಯ ಪೂರ್ವದ ಮೂರು ಮಂಗಳವಾರ ಎರಡು ಶುಕ್ರವಾರದ ದಿನಗಳಂದು ಐದು ಹೊರಬೀಡುಗಳು ಆಗುತ್ತವೆ. ಹೊರಬೀಡು ಎಂದರೆ ರಾತ್ರಿ ಗಡಿ ಗದ್ದುಗೆಗಳಿಗೆ ಹೋಗಿ ಜಗನ್ಮಾತೆಯ ಸೇವೆಗೆ ಉಪಯೋಗಿಸುವ ಆಯುಧಗಳು ವಾದ್ಯಗಳು, ಕಹಳೆ, ಹಲಗೆ, ದೀವಟಿಗೆ ಮೊದಲಾದವುಗಳನ್ನು ದೇವಿಯ ಎದುರಿಟ್ಟು ಪೂಜಿಸಿ ಪ್ರಾರ್ಥಿಸುವುದು. ಐದು ಹೊರಬೀಡಿನಲ್ಲಿ ಮೂರು ಮಂಗಳವಾರಗಳಂದು ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಮೆರವಣಿಗೆಯೊಂದಿಗೆ ಪೂರ್ವ ದಿಕ್ಕಿನ ಕಡೆಗೆ ಹೋದರೆ, ಉಳಿದೆರಡು ಶುಕ್ರವಾರ ಪಡಲಿಗೆಯು ಉತ್ತರ ದಿಕ್ಕಿನ ಗಡಿಯ ನಿಶ್ಚಿತ ಗದ್ದುಗೆಗೆ ಹೋಗುತ್ತದೆ. ಎಲ್ಲ ಹೊರಬೀಡಿನಲ್ಲಿ ರಾತ್ರಿ ಮೆರವಣಿಗೆಗಳು ಶ್ರೀ ದೇವಿಗೆ ಉಡಿ ತುಂಬಿದ ನಂತರ ಮರ್ಕಿ ದುರ್ಗಿ ದೇವಸ್ಥಾನಕ್ಕೆ ಹೊಗುವವು ಅಲ್ಲಿ ದೇವತೆಗಳಿಗೆ ಉಡಿ ಸಮರ್ಪಣೆಯಾದ ನಂತರ ಜಾತ್ರೆಯ ಗದ್ದುಗೆಗೆ ಹೋಗಿ ಅಲ್ಲಿ ಹೊರಬೀಡಿನನುಗುಣವಾಗಿ ಉತ್ಸವ ಮೂರ್ತಿಯನ್ನು ಪಡಲಿಗೆಯನ್ನು ಇಟ್ಟು ಪೂಜಿಸುತ್ತಾರೆ. ಮಂಗಳವಾರದ ಹೋರಬೀಡುಗಳಲ್ಲಿ ಪಲ್ಲಕ್ಕಿಯು ಪುರ್ವ ದಿಕ್ಕಿನ ಕೊನೆಯ ಗದ್ದುಗೆಗೆ ಬರುತ್ತದೆ. ನಂತರ ಮೆರವಣಿಗೆಯು ಪೂನಃ ಮರ್ಕಿ ದುರ್ಗಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ಮಾರಿಗುಡಿಗೆ ಹೋಗಿ ಪೂಜೆ ನೆರವೇರಿಸಿ ವಿಸರ್ಜನೆಯಾಗುತ್ತದೆ. ಈ ಜಾತ್ರೆಯಲ್ಲಿ ಅಮ್ಮನವರು ಸವಾರಿ ಮಾಡುವ ರಥವನ್ನು ಕಟ್ಟುವುದು ತುಂಬಾ ವಿಶೇಷ. ನಾಲ್ಕನೆ ಹೊರಬೀಡಿನ ಮರುದಿನ ಮಂಗಳವಾದ್ಯದೊಂದಿಗೆ ಕಾಡಿಗೆ ಹೋಗಿ ಮೊದಲೆ ನಿಶ್ಚಯಿಸಿದ 'ತಾರಿ' ಮರವನ್ನು ಕಡಿಯುತ್ತಾರೆ. ನಂತರ ಐದನೇ ಹೊರಬೀಡಿನ ದಿನ ಮುಂಜಾನೆ ರಷ್ಮಿ ಮೂಡವ ಸಮಯದಲ್ಲಿ ಮಂಗಳವಾದ್ಯದೊಂದಿಗೆ ಮೆರವಣಿಗೆಯ ಮುಕಾಂತರ ಮರವನ್ನು ತಂದು ದೇವಾಲಯದ ಎದರು ಪೂಜೆ ಸಲ್ಲಿಸಲಾಗುತ್ತದೆ. ಜಾತ್ರೆ ಪ್ರಾರಂಭವಾಗುವ ಏಳು ದಿನಗಳ ಮೊದಲೆ ರಥ ಕಟ್ಟಲು ಪ್ರಾರಂಭಿಸುತ್ತಾರೆ ಬಾಬುದಾರರು ಬಡಿಗೆರರು ಆಚಾರಿಗಳು ಉಪ್ಪಾರರು ರಥ ಕಟ್ಟುವ ಕಾರ್ಯ ಮಾಡುತ್ತಾರೆ. ಹೊರಬೀಡಿನ ನಂತರ ಮಾರಿ ಕೋಣವನ್ನು ಮೆರೆವಣಿಗೆ ಮುಖಾಂತರ ಮರ್ಕಿ ದುರ್ಗಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ, ನಂತರ ಅಲ್ಲಿಂದ ಗದ್ದುಗೆಯತ್ತ ಸಾಗುತ್ತದೆ ಅಲ್ಲಿ ಅಸಾದಿಯರು ಮತ್ತು ಮೇತ್ರಿಯರು ರಂಗವಿಧಾನ ನೆರೆವೆರಿಸಿ ಪಟ್ಟದ ಕೋಣಕ್ಕೆ ಕಂಕಣ ಧಾರಣೆ ಮಾಡುತ್ತಾರೆ ಇದನ್ನು ಅಂಕೆ ಹಾಕುವುದು ಎನ್ನುತ್ತಾರೆ. ಅಂಕೆ ಹಾಕಿದ ದಿನ ಅಮ್ಮನವರ ವಿಗ್ರಹ ವಿಸರ್ಜನೆ ಮಾಡಿ ಬಣ್ಣಕ್ಕೆ ಕಳುಹಿಸುವ ಸಂಪ್ರದಾಯ ಇರುತ್ತದೆ. ಜಾತ್ರೆಯ ಗದ್ದುಗೆಯಲ್ಲಿ ನಾಡಿಗ ಬಾಬುದಾರರಿಂದ ಮಂಗಳಾರತಿ ನಡೆಯುತ್ತದೆ ಈ ಮಂಗಳಾರಾತಿಯಿಂದ ಒಂದು ವಿಶೇಷ ಹಣತೆ ಹಚ್ಚುತ್ತಾರೆ ಈ ಹಣತೆಯನ್ನು ಜಾತ್ರೆ ಮುಗಿಯುವವರೆಗೆ ಶಾಂತವಾಗದಂತೆ ಕಾಯಬೇಕು ಮೇಟಿಯವರು ದೀಪ ಆರದಂತೆ ಕಾಯುವ ಕೆಲಸ ಮಾಡುತ್ತಾರೆ. ಇದನ್ನು ಮೇಟ ದೀಪ ಎನ್ನುತ್ತಾರೆ ಅಂಕೆ ಹಾಕಿದ ನಂತರ ಬರುವ ಮೊದಲ ಮಂಗಳವಾರ ಶ್ರೀದೇವಿಗೆ ಕಲ್ಯಾಣ ಮಹೋತ್ಸವ ಮಾಡಲಾಗುತ್ತದೆ. ಅದೆ ದಿನ ರಥಕ್ಕೆ ಕಳಸಾರೋಹಣ ನೆರವೇರುತ್ತದೆ. ಶ್ರೀ ದೇವಿಯ ಮದುವೆಯ ಸಮಾರಂಭದಲ್ಲಿ ವಿಶೆಷವಾಗಿ ನಾಡಿಗರು, ಬಾಬುದಾರರು ಊರ ಗಣ್ಯರು ಸಕಲ ಭಕ್ತಾದಿಗಳು ಪಾಲ್ಗೊಳ್ಳುತ್ತಾರೆ ಶ್ರೀದೇವಿಯು ಸರ್ವಾಲಂಕಾರ ಭುಷಿತಳಾಗಿ ರಾರಜಿಸುತ್ತಿರುತ್ತಾಳೆ. ಶ್ರೀ ದೇವಿಯ ಮದುವೆಯ ಸಂಪ್ರದಾಯಂದತೆ ಶ್ರೀ ದೇವಿಗೆ ಮಂಗಳ ಸೂತ್ರ ಧಾರಣೆ, ಗುಡಿಗಾರರ ದ್ರಷ್ಟಿ ಪೂಜೆ, ನಾಡಿಗರ ಪೂಜೆ , ಚಕ್ರಸಾಲಿ ಪೂಜೆ ,ಕೇದಾರಿಮನೆತನದ ಪೂಜೆ ಹಾಗು ಪೂಜಾರರ ಪೂಜೆಗಳು ನೆರವೇರುತ್ತವೆ. ಈ ಕಲ್ಯಾಣೊತ್ಸವದಲ್ಲಿ ಘಟ್ಟದ ಕೆಳಗಿನ ಜನರು ಹಾಗು ಬಯಲು ಸೀಮೆಯ ಲಂಬಾಣಿ ಜನಾಗಂದ ಜನರು ವಿಶೇಷವಾಗಿ ಮಹಿಳೆಯರು ತಮ್ಮ ಸಂಪ್ರದಾಯ ಉಡುಗೆ ಧರಿಸಿ ನೃತ್ಯ ಮಾಡುವುದುದು ಮತ್ತು ಸಂಗೀತ ವಾದ್ಯಗಳನ್ನು ನುಡಿಸುವುದು ಮದುವೆಯ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದು ಕೊಡುತ್ತದೆ. ಬುಧವಾರ ಮುಂಜಾನೆ ಶ್ರೀದೇವಿಯನ್ನು ರಥದ ಮೆಲೆ ಪ್ರತಿಷ್ಠಾಪನೆ ಮಾಡುವ ಮೊದಲು ದೇವಾಲಯದ ಮುಂಭಾಗದ ಭೂತರಾಜನಿಗೆ ಸಾತ್ವಿಕ ಬಲಿ ಸಮರ್ಪಣೆ ಮಾಡಲಾಗುತ್ತದೆ. ರಥೋತ್ಸವದೊಂದಿಗೆ ಶ್ರೀದೇವಿಯ ಶೋಭಾಯಾತ್ರೆ ಅದ್ದೂರಿಯಾಗಿ ಮಾರಿಗುಡಿಯಿಂದ ಊರ ಮದ್ಯದ ಬಿಡಕಿ ಬೈಲಿನ ಜಾತ್ರಾ ಗದ್ದುಗೆಗೆ ಬಂದು ತಲುಪುತ್ತದೆ. ಶ್ರೀ ದೇವಿಯ ಉ ಶೋಭಾಯಾತ್ರೆಯಲ್ಲಿ ಬರುವಾಗ ಭಕ್ತರ ಭಕ್ತಿಯ ಪರಾಕಾಷ್ಠೆಯ ತುತ್ತತುದಿಯಲ್ಲಿರುತ್ತದೆ ಜೋಗತಿಯರು ನೃತ್ಯ ಮಾಡುತ್ತಿರುತ್ತಿದ್ದರೆ ಅಸಾದಿಯರ ಕೋಲಾಟ, ಡೊಳ್ಳು ಕುಣಿತ, ವಾಲಗ ಕಹಳೆಯ ನಿನಾದ ಝೇಂಕರಿಸುತ್ತಿರುತ್ತದೆ. ಇತರ ಭಕ್ತರು ರಥಕ್ಕೆ ಬಾಳೆಹಣ್ಣನ್ನು ಹಾಕುತಿದ್ದರೆ ಇನ್ನೂ ಕೆಲ ಭಕ್ತರು ಹಾರುಗೋಳಿ ಅಂದರೆ ಕೋಳಿಯನ್ನು ಹಾರಿ ಬಿಡುತ್ತರೆ. ಶೋಭಾಯಾತ್ರೆ ಮುಗಿದ ಮೇಲೆ ಅಮ್ಮನವರನ್ನು ಜಾತ್ರಾ ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ‌. ೮ ದಿನಗಳ ಕಾಲ ಜಗನ್ಮಾತೆ ಸಕಲ ಸರ್ವಾಲಂಕಾರ ಭುಷಿತಳಾಗಿ ನಗರ ಮದ್ಯಭಾಗದಲ್ಲಿನ ಗದ್ದುಗೆಯ ಮೇಲೆ ಕುಳಿತು ಜನರಿಗೆ ದರ್ಶನ ಭಾಗ್ಯ ಕರುಣಿಸುತ್ತಾಳೆ. ಶ್ರೀದೇವಿಗೆ ಭಕ್ತರು ಸಲ್ಲಿಸಬೇಕಾದ ಸೇವೆಗಳೆಲ್ಲವು ಮರುದಿನ ಗುರುವಾರದಿಂದ ಪ್ರಾರಂಭವಾಗುತ್ತದೆ. ೮ ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ಜಾತ್ರೆಗೆ ಪ್ರತಿನಿತ್ಯವು ಲಕ್ಷಾಂತರ ಜನ ಬರುತ್ತಾರೆ. ಜಾತ್ರೆ ಪ್ರಾರಂಭವಾದ ೮ ದಿನಗಳ ನಂತರ ಬುಧವಾರ ಜಾತ್ರಾ ವಿಸರ್ಜನಾ ವಿಧಿವಿಧಾನಗಳು ನೆರವೇರುತ್ತವೆ ನಾಡಿಗ ಬಾಬುದಾರರಿಂದ ಕೊನೆಯ ಮಂಗಳಾರತಿ, ಶ್ರೀದೇವಿಯನ್ನು ಗದ್ದುಗೆಯಿಂದ ಇಳಿಸಿ ಮಂಟಪದ ಮಧ್ಯಭಾಗದಲ್ಲಿ ಕುಡಿಸಿದಾಗ ಅಸಾದಿಯರು ಹುಲುಸು ಪ್ರಸಾದವನ್ನು ಪೂಜಿಸಿ ರೈತರಿಗೆ ವಿತರಿಸುತ್ತಾರೆ ರೈತರು ಅದನ್ನು ತಮ್ಮ ಹೊಲದಲ್ಲಿ ಬಿತ್ತುತ್ತಾರೆ. ಶ್ರೀ ದೇವಿಯು ಜಾತ್ರೆಯ ಮಂಟಪದಿಂದ ರಥದಲ್ಲಿ ಮರಳುವುದಿಲ್ಲ ಬದಲಾಗಿ ವಿಶೆಷವಾಗಿ ಸಿದ್ದಗೊಳಿಸಿದ ಅಟ್ಟಲಿನಲ್ಲಿ ಮರಳುತ್ತಾಳೆ. ಜಾತ್ರೆ ಕೊನೆಯ ವಿಧಾನಗಳಲ್ಲಿ ಮಾತಂಗಿ ಚಪ್ಪರ ಸುಡುವುದು ಒಂದು, ದೇವಿ ಗದ್ದುಗೆಯಿಂದ ಮೆರವಣಿಗೆಯಲ್ಲಿ ಹೋಗುವಾಗ ಮಹಿಷಾಸುರನ ಸಂಹಾರ ಸಂಕೇತವಾಗಿ ಮಾತಂಗಿ ಚಪ್ಪರ ಸುಡುತ್ತಾರೆ‌. ಜಾತ್ರೆಯ ಕಟ್ಟಕಡೆಯ ವಿಧಾನ ಪೂರ್ವ ದಿಕ್ಕಿನ ಗಡಿಯ ಗದ್ದುಗೆಗೆ ಹೋಗಿ ಮುಕ್ತಾಯದ ವಿಧಿ ನೆರೆವೆರಿಸಲಾಗುತ್ತದೆ ಅಲ್ಲಿ ಶ್ರೀದೇವಿಯ ಮೂರ್ತಿಯನ್ನು ವಿಸರ್ಜಿಸಲಾಗುತ್ತದೆ. ಹೀಗೆ ಜಾತ್ರೆ ಸಂಪನ್ನಗೊಳ್ಳುತ್ತದೆ. ಈ ಜಾತ್ರೆಯಲ್ಲಿ ಜನರಿಗೆ ಮನರಂಜನೆಗೆನು ಕೊರತೆ ಇಲ್ಲ ಮಕ್ಕಳು ಯುವಕರಿಂದ ಹಿಡಿದು ವೃದ್ದರಿಗೆಲ್ಲರಿಗು ಇಲ್ಲಿ ಮನರಂಜನೆಯ ಮಹಾಪೂರವೆ ಇರುತ್ತದೆ. ಕಲಾಸಕ್ತರಿಗೆ ವಿವಿಧ ನಾಟಕ ಕಂಪನಿಗಳಿಂದ ನಾಟಕ, ಯಕ್ಷಗಾನ, ಸರ್ಕಸ್ಸುಗಳು‌ ಇರುತ್ತವೆ , ದೈತ್ಯ ತೊಟ್ಟಿಲು ಜೋಕಾಲಿಗಳು ಮತ್ತು ವಿವಿಧ ಆಟಿಕೆಗಳು , ಜಾದು ಚಮತ್ಕಾರಗಳು, ಶ್ವಾನ ಪ್ರದರ್ಶನ , ಪುಸ್ತಕ ಪ್ರಿಯರಿಗೆ ಪುಸ್ತಕ ಪ್ರದರ್ಶನ, ಕೆರೆಯಲ್ಲಿ ಬೋಟಿಂಗ್ , ತಿಂಡಿ ಪ್ರಿಯರಿಗೆ ವಿವಿಧ ಭಗೆಯ ತಿನುಸುಗಳು, ಮಹಿಳೆಯರ ಪ್ರಿಯ ಸೌಂದರ್ಯ ವರ್ಧಕ ಆಭರಣ ಬೆಳೆಗಳ ಮಳಿಗೆಗಳು, ಬಟ್ಟೆ ಬ್ಯಾಗು ಮಕ್ಕಳ ಆಟಿಕೆಗಳ ಮಳಿಗೆಗಳು, ಮಹಿಳಿಯರಿಗೆ ಗೃಹೊಪಕರಣಗಳ ಮಳಿಗೆಗಳು ಹೀಗೆ ಸಕಲ ರೀತಿಯ ಮನರಂಜನೆ ಈ ಜಾತ್ರೆಯಲ್ಲಿ ಇರುತ್ತದೆ. ವಿಶೆಷವಾಗಿ ಈ ಜಾತ್ರೆಯಲ್ಲಿ ಎಲ್ಲೂ ಪ್ರಾಣಿ ಹಿಂಸೆ ಇಲ್ಲ ,ಬಹುಶಃ ಒಂದು ಗ್ರಾಮ ದೇವತೆ‌ ಈಗ ಇಡಿ ನಾಡಿಗೆ ಅಧಿದೇವತೆ ಆಗಿರೋದನ್ನ ನಾವು ಸಿರ್ಸಿ ಯಲ್ಲಿ ಮಾತ್ರ ಕಾಣಬಹುದು. ಸಿರ್ಸಿಗೆ ಪರ ಊರಿನಿಂದ ಬರುವ ಭಕ್ತಾದಿಗಳಿಗೆ ಕರ್ನಾಟಕ ರಾಜ್ಯ ಸಾರಿಗೆಯ ಸಂಸ್ಥೆಯು ಕುಂದಾಪುರ, ಬೈಂದೂರು, ಕಾರವಾರ, ಶಿವಮೊಗ್ಗ, ಸಾಗರ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಹಾವೇರಿ ದಾವಣಗೆರೆಗಳಿಂದ ಹೆಚ್ಚಿನ ಬಸ್ ಕಲ್ಪಿಸಿರುತ್ತದೆ, ಬಂದ ಭಕ್ತಾದಿಗಳಿಗೆ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ ಇರುತ್ತದೆ , ಮತ್ತು ನಗರದ ಅಲ್ಲಲ್ಲಿ ಭಕ್ತರಿಂದ ಉಚಿತ ಮಜ್ಜಿಗೆ ಪಾನಕಗಳು ಮತ್ತು ದಾಸೋಹ ಸೇವೆಗಳು ಇರುತ್ತವೆ. ಇತಿಹಾಸ ಇಲ್ಲಿನ ಇತಿಹಾಸ ಮೌರ್ಯರ ಕಾಲದಿಂದ ಪ್ರಾರಂಭವಾಗುತ್ತದೆ (ಪ್ರ.ಶ.ಪು.4-3ನೆಯ ಶತಮಾನ). ಈ ಪ್ರದೇಶ ಮೌರ್ಯ ಸಾಮ್ರಾಜ್ಯದಲ್ಲಿತ್ತೆಂದೂ ವನವಾಸಿ ಅಥವಾ ಇಂದಿನ ಬನವಾಸಿ ಮುಖ್ಯ ಸ್ಥಳವಾಗಿತ್ತೆಂದೂ ಈ ಪ್ರದೇಶಕ್ಕೆ ಬೌದ್ಧ ಭಿಕ್ಷುಗಳನ್ನು ಧರ್ಮಪ್ರಸಾರಕ್ಕಾಗಿ ಅಶೋಕನ ಕಾಲದಲ್ಲಿ ಕಳಿಸಲಾಗಿತ್ತೆಂದೂ ಮಹಾವಂಶ, ದೀಪವಂಶ ಮೊದಲಾದ ಧರ್ಮಗ್ರಂಥಗಳಿಂದ ತಿಳಿಯುತ್ತದೆ. ಮುಂದೆ ಪ್ರ.ಶ.ಪು. 2 ರಿಂದ ಪ್ರ.ಶ.3ನೆಯ ಶತಮಾನದಲ್ಲಿ ಸಾತವಾಹನರ ಆಳ್ವಿಕೆಯಲ್ಲಿ ಇತ್ತೆಂದು ಬನವಾಸಿಯ ಉತ್ಖನನಗಳಿಂದ ತಿಳಿಯುತ್ತದೆ. ಇಲ್ಲಿ ಯಜ್ಞಶಾತಕರ್ಣಿಯ ಕೆಲವು ನಾಣ್ಯಗಳು ದೊರಕಿವೆ. 2 ಮತ್ತು 3ನೆಯ ಶತಮಾನದಲ್ಲಿ ಸಾತವಾಹನರ ಸಂಬಂಧಿಗಳಾದ ಚಟುಕುಲದವರು ಇಲ್ಲಿ ಆಳುತ್ತಿದ್ದರು. 4 ರಿಂದ 6ನೆಯ ಶತಮಾನದವರೆಗೆ ಈ ಪ್ರದೇಶ ಕದಂಬರ ಆಳ್ವಿಕೆಯಲ್ಲಿತ್ತು. ಕದಂಬರ ಅನಂತರ ಬಾದಾಮಿಯ ಚಾಲುಕ್ಯರು (6-8ನೆಯ ಶತಮಾನ), ರಾಷ್ಟ್ರಕೂಟರೂ (8-10ನೆಯ ಶತಮಾನ) ಆಳಿದರು. ರಾಷ್ಟ್ರಕೂಟರ ಮತ್ತು ಅನಂತರ ಕಲ್ಯಾಣದ ಚಾಲುಕ್ಯರ ಕಾಲದಲ್ಲಿ ಈ ಜಿಲ್ಲೆಯ ಬಹುಭಾಗ ಬನವಾಸಿ ಎಂಬ ಪ್ರಮುಖ ಪ್ರಾಂತ್ಯದ ಭಾಗವಾಗಿತ್ತು. ಅಂದಿನ ಆಳರಸರ ಪ್ರತಿನಿಧಿಗಳು ಬನವಾಸಿಯನ್ನು ತಮ್ಮ ಪ್ರಾಂತೀಯ ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. 11 ಮತ್ತು 13ನೆಯ ಶತಮಾನಗಳಲ್ಲಿ ಹಾನಗಲ್ಲು ಮತ್ತು ಗೋವೆಯ ಕದಂಬರು ಚಾಲುಕ್ಯ ಸಾಮಂತರಾಗಿ ಹೆಚ್ಚುಮಟ್ಟಿಗೆ ಈ ಪ್ರದೇಶವನ್ನು ಆಳುತ್ತಿದ್ದರು. 14ನೆಯ ಶತಮಾನದಾರಭ್ಯ ಸು.16ನೆಯ ಶತಮಾನದವರೆಗೆ ಈ ಜಿಲ್ಲೆಯ ಬಹುಭಾಗ ವಿಜಯನಗರ ಸಾಮ್ರಾಜ್ಯಕ್ಕೆ ಸೇರಿತ್ತು. 17-18ನೆಯ ಶತಮಾನಗಳಲ್ಲಿ ಕೆಳದಿಯ ನಾಯಕರು ಮತ್ತು ಬಿಳಗಿ, ಸ್ವಾದಿ, ಗೇರುಸೊಪ್ಪೆ ಮೊದಲಾದ ಪಾಳಯಗಾರ ವಂಶದವರು ಜಿಲ್ಲೆಯ ಬೇರೆ ಬೇರೆ ಪ್ರದೇಶಗಳಲ್ಲಿ ಆಳುತ್ತಿದ್ದರು. 18ನೆಯ ಶತಮಾನದ ಉತ್ತರಾರ್ಧದಲ್ಲಿ, ಉತ್ತರ ಕನ್ನಡ ಜಿಲ್ಲೆ ಹೈದರಾಲಿ ಮತ್ತು ಟಿಪ್ಪುಸುಲ್ತಾನರ ಆಳ್ವಿಕೆಯಲ್ಲಿ ಮೈಸೂರು ಸಂಸ್ಥಾನದ ಭಾಗವಾಯಿತು. ನಾಲ್ಕನೆಯ ಮೈಸೂರು ಯುದ್ಧ(೧೭೯೮ – ೧೭೯೯)ದಲ್ಲಿ, ಶ್ರೀರಂಗಪಟ್ಟಣದ ಪತನವಾದ ನಂತರ, 1799ರ ಜುಲೈ 8ರಂದು ಈಸ್ಟ್‌ ಇಂಡಿಯಾ ಕಂಪೆನಿ ಆಡಳಿತ ಉತ್ತರದಲ್ಲಿ ಕಾರವಾರ ಮತ್ತು ದಕ್ಷಿಣದಲ್ಲಿ ಇಂದಿನ ಕಾಂಞಿಂಗಾಡು (ಕೇರಳದ ಕಾಸರಗೋಡು ಜಿಲ್ಲೆ) ಗಳ ನಡುವಿನ ಪ್ರದೇಶವನ್ನು ವಶಪಡಿಸಿಕೊಂಡು, "ಕೆನರಾ" ಜಿಲ್ಲೆಯೆಂದು ಹೆಸರನ್ನಿಟ್ಟಿತು. ಮಂಗಳೂರು ಈ ಜಿಲ್ಲೆಯ ಆಡಳಿತ ಕೇಂದ್ರವಾಗಿತ್ತು. ಸರ್ ಥಾಮಸ್ ಮುನ್ರೋ ಕೆನರಾ ಜಿಲ್ಲೆಯ ಮೊಟ್ಟಮೊದಲ ಕಲೆಕ್ಟರ್ ಆದರು. ಅಲ್ಲಿಂದ 1957ರವರೆಗೆ ಈಸ್ಟ್‌ ಇಂಡಿಯಾ ಕಂಪೆನಿ ಆಡಳಿತ ಮುಂದುವರೆಯಿತು. ೧೮೫೭ರ ಸಿಫಾಯಿ ದಂಗೆ ಕೆನರಾ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿದ್ದರಿಂದ, ಬ್ರಿಟಿಷ್ ನೇರ ಆಳ್ವಿಕೆಗೆ ಒಳಪಟ್ಟಿತು. ಅದೇ ಕಾರಣಕ್ಕಾಗಿ, ಕೆನರಾ ಜಿಲ್ಲೆಯನ್ನು ನಾರ್ತ್ ಕೆನರಾ ಮತ್ತು ಸೌತ್ ಕೆನರಾ ಎಂಬ ೨ ಜಿಲ್ಲೆಗಳನ್ನಾಗಿ ವಿಭಜಿಸಿ, ನಾರ್ತ್ ಕೆನರಾವನ್ನು ಮುಂಬೈ ಪ್ರಾಂತ್ಯಕ್ಕೂ, ಸೌತ್ ಕೆನರಾವನ್ನು ಮದ್ರಾಸ್ ಪ್ರಾಂತ್ಯಕ್ಕೂ ಸೇರಿಸಲಾಯಿತು. ಮುಂಬೈ ಮೂಲಕ ನಡೆಯುವ ಅಂತರರಾಷ್ಟ್ರೀಯ ಹತ್ತಿ ಉದ್ಯಮಕ್ಕೊಸ್ಕರ, ಉತ್ತರ ಕನ್ನಡವನ್ನು ಮುಂಬೈ ಪ್ರಾಂತ್ಯಕ್ಕೆ ಸೇರಿಸಲಾಗಿದೆ ಎಂದು ಬ್ರಿಟಿಷರು ಸಮಜಾಯಿಶಿ ನೀಡಿದರು. ಸು.150 ವರ್ಷ ಆ ಪ್ರಾಂತ್ಯದಲ್ಲಿದ್ದ ಈ ಜಿಲ್ಲೆ ಭಾಷಾನುಗುಣ ಪ್ರಾಂತ್ಯ ರಚನೆಯ ಅನಂತರ (1956) ಕರ್ನಾಟಕ (ಅಂದಿನ ಮೈಸೂರು) ರಾಜ್ಯಕ್ಕೆ ಸೇರಿತು. ಸ್ವಾತಂತ್ರ್ಯ ಸಮರ 1890ರಲ್ಲಿ ಜಿಲ್ಲೆಯ ಜನರಿಂದ ಜಂಗಲ್ ಸವಲತ್ತುಗಳನ್ನು ಕಸಿದುಕೊಳ್ಳಲಾಯಿತು. 1914-15ರಲ್ಲಿ ರೈತರ ಮೇಲೆ ವಿಪರೀತ ಕರ ಹೇರಲಾಯಿತು. ಮಾರಕ ರೋಗಗಳಾದ ಮಲೇರಿಯ, ಪ್ಲೇಗು ಹಬ್ಬಿ ಜನಸಂಖ್ಯೆ ಗಣನೀಯವಾಗಿ ಇಳಿಯಿತು. 1901ರಲ್ಲಿ 53,071 ಇದ್ದ ಜನಸಂಖ್ಯೆ 1931ರ ವೇಳೆಗೆ 37,000ಕ್ಕೆ ಇಳಿದಿತ್ತು. ಬ್ರಿಟಿಷ್ ಆಡಳಿತದಿಂದ ಜನ ಬೇಸರಗೊಂಡಿದ್ದರು. ಮೂಲತಃ ಲೋಕಮಾನ್ಯ ತಿಲಕರ ಕೇಸರಿಯ ಅಗ್ರಲೇಖನದಿಂದ ಇಲ್ಲಿಯ ಜನ ಸ್ಫೂರ್ತಿ ಪಡೆದರು. ಕನ್ನಡ ಸುವಾರ್ತೆ (1882), ಹವ್ಯಕ ಸುಬೋಧ (1895), ಸಂಯುಕ್ತ ಕರ್ನಾಟಕ, ಕಾನಡಾವೃತ್ತ (1916), ಕಾನಡಾ ಧುರೀಣ, ಬಾಂಬೆಕ್ರಾನಿಕಲ್ ಪತ್ರಿಕೆಗಳಿಂದ ಜನರು ದೇಶವಿದೇಶದ ಸುದ್ದಿಗಳನ್ನು ತಿಳಿದುಕೊಂಡು ಬ್ರಿಟಿಷ್ ಆಡಳಿತದ ವಿರುದ್ಧ ಸಿಡಿದೆದ್ದರು. ಮೊದಲು ಟಿಳಕರ ವಿಚಾರಗಳನ್ನು ಬೆಂಬಲಿಸಿದ ಉತ್ತರ ಕನ್ನಡದ ಜನ ತಿಲಕರ ಮರಣಾನಂತರ (1920) ಗಾಂಧೀಜಿಯವರು ನೇತೃತ್ತ್ವವಹಿಸಿದಾಗ ಅವರ ನಾಯಕತ್ವದಲ್ಲಿ ಹೋರಾಟ ಮುಂದುವರಿಸಿದರು. ಸ್ವದೇಶಿ ಚಳವಳಿ (1906), ಅಸಹಕಾರ ಆಂದೋಲನ, ಉಪ್ಪಿನ ಸತ್ಯಾಗ್ರಹ, ಅರಣ್ಯ ಸತ್ಯಾಗ್ರಹ, ಕರನಿರಾಕರಣೆ, ವೈಯಕ್ತಿಕ ಸತ್ಯಾಗ್ರಹ ಇವುಗಳಲ್ಲೆಲ್ಲಾ ಜಾತಿಮತಗಳನ್ನೆಣಿಸದೆ ಸಾವಿರಾರು ಜನ ಬೀದಿಗಿಳಿದು ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ನಿರತರಾದರು. ಅನೇಕರು ಶಾಲೆ ಕಾಲೇಜು ಕಚೇರಿಗಳನ್ನು ಬಿಟ್ಟು, ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು ಜೈಲು ಸೇರಿದರು, ಕಠಿಣ ಶಿಕ್ಷೆ ಅನುಭವಿಸಿದರು. ಸಿರ್ಸಿ, ಸಿದ್ದಾಪುರ, ಅಂಕೋಲ ಹೋರಾಟದ ಕೇಂದ್ರಗಳಾಗಿದ್ದವು. ನಾರಾಯಣ ಚಂದಾವರಕರ, ತಿಪ್ಪಯ್ಯ ಮಾಸ್ತರ, ಕಡವೆ ರಾಮಕೃಷ್ಣ ಹೆಗಡೆ, ವಾಮನ ಹೊರಿಕೆ, ಶಂಕರರಾವ್ ಗುಲ್ವಾಡಿ, ತಿಮ್ಮಪ್ಪ ನಾಯಕ, ನಾರಾಯಣ ಮರಾಠೆ, ಶಿರಳಗಿ ಸುಬ್ರಾಯಭಟ್ಟ, ಶೇಷಗಿರಿ ನಾರಾಯಣರಾವ್‌ ಕೇಶವೈನ್‌ (ಮೋಟಿನಸರ), ತಿಮ್ಮಪ್ಪ ಹೆಗಡೆ, ದೊಡ್ಮನೆ ನಾಗೇಶ ಹೆಗಡೆ, ಭವಾನಿಬಾಯಿ ಕಾನಗೋಡು, ಸೀತಾಬಾಯಿ ಮಡಗಾಂವಕರ, ಜೋಗಿ ಬೀರಣ್ಣ ನಾಯಕ, ಎನ್.ಜಿ.ಪೈ., ನಾರಾಯಣ ಪಿ ಭಟ್ಟ ಮೊದಲಾದವರು ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡು ಉತ್ತರ ಕನ್ನಡ ಜಿಲ್ಲೆಯ ಸಾಧನೆಗೆ ಚರಿತ್ರೆಯ ಪುಟಗಳಲ್ಲಿ ಶಾಶ್ವತ ಸ್ಥಾನ ದೊರಕಿಸಿಕೊಟ್ಟಿದ್ದಾರೆ. ಈ ಜಿಲ್ಲೆಯ ಜನ ಮಾಡಿದ ಉಪ್ಪಿನ ಸತ್ಯಾಗ್ರಹ, ಕರನಿರಾಕರಣೆ ಚಳವಳಿ ಇವು ಹೊಸ ಇತಿಹಾಸ ನಿರ್ಮಿಸಿದವು. ಭಾರತಕ್ಕೆ ಸ್ವಾತಂತ್ರ್ಯ ಬಂದಮೇಲೂ ಕರ್ನಾಟಕ ಏಕೀಕರಣ ಚಳವಳಿ ಮುಂದುವರಿಯಿತು. 1954ರಲ್ಲಿ ದಿನಕರ ದೇಸಾಯಿ ಮತ್ತು ಪಿ.ಎಸ್.ಕಾಮತರು ಮನವಿಯೊಂದನ್ನು ತಯಾರಿಸಿ ರಾಜ್ಯ ಮರುವಿಂಗಡಣೆ ಆಯೋಗಕ್ಕೆ ಒಪ್ಪಿಸಿದ್ದರು. 1940ರ ಸುಮಾರಿನಲ್ಲಿ ಉಳುವವನೆ ಭೂಮಿಯ ಒಡೆಯ ಎಂಬ ಘೂೕಷಣೆಯೊಂದಿಗೆ ಚುಟುಕು ಬ್ರಹ್ಮ ದಿನಕರ ದೇಸಾಯಿ ಅವರ ಧುರೀಣತ್ವದಲ್ಲಿ ನಡೆದ ಚಳವಳಿಯಲ್ಲಿ ಜಿಲ್ಲೆಯ ಜನ ಪಾಲ್ಗೊಂಡು ಅದನ್ನು ಒಂದು ಬಲಿಷ್ಠ ಸಂಘಟನೆಯನ್ನಾಗಿ ರೂಪಿಸಿದರು. ಸರ್ಕಾರ ಗಾಬರಿಗೊಂಡು 1940ರಿಂದ ದಿನಕರ ದೇಸಾಯಿಯವರು ಉತ್ತರ ಕನ್ನಡ ಗಡಿಯನ್ನು ಪ್ರವೇಶಿಸದಂತೆ ಆಜ್ಞೆ ಹೊರಡಿಸಿತು. ಆಗ ದಿನಕರ ದೇಸಾಯಿಯವರು ಸರ್ವೆಂಟ್ಸ್‌ ಆಫ್ ಇಂಡಿಯಾ ಸೊಸೈಟಿಯ ಸದಸ್ಯರಾಗಿ ಮುಂಬಯಿಯಲ್ಲಿದ್ದರು. ಆಗ ಶೇಷಗಿರಿ ಪಿಕಳೆ ಮತ್ತು ದಯಾನಂದ ನಾಡಕರ್ಣಿಯವರು ರೈತಕೂಟದ ಸೂತ್ರಗಳನ್ನು ಕೈಯಲ್ಲಿ ಹಿಡಿದುಕೊಂಡರು. ದಿನಕರ ದೇಸಾಯಿಯವರ ಮಾರ್ಗದರ್ಶನದಲ್ಲಿ ಚಳವಳಿ ನಡೆಯುತ್ತಿತ್ತು. ರೈತರು ಬಲಿಷ್ಠಗೊಳ್ಳಲೂ ಸ್ವತಂತ್ರ್ಯರಾಗಲೂ ಇದು ಕುಮ್ಮಕ್ಕು ನೀಡಿತು. ಈ ಚಳವಳಿಯಲ್ಲಿ ಉತ್ತರ ಕನ್ನಡದ ಸಾವಿರಾರು ರೈತರು ರಾಜಕೀಯ ಪಕ್ಷಗಳ ಕಾರ್ಯಕರ್ತರು ಒಮ್ಮನಸ್ಸಿನಿಂದ ದುಡಿದು ಒಂದು ಸಾಮಾಜಿಕ ಕ್ರಾಂತಿಯನ್ನೇ ಮಾಡಿದರು ಭೌಗೋಳಿಕ ಈ ಜಿಲ್ಲೆಯನ್ನು ಎರಡು ಭೌಗೋಳಿಕ ವಿಭಾಗಗಳನ್ನಾಗಿ ವಿಂಗಡಿಸಬಹುದು. ಸಮುದ್ರದಂಚಿನಿಂದ 10-15ಕಿಮೀ ಅಗಲ ಮತ್ತು ಸು.130ಕಿಮೀ ಉದ್ದವಾಗಿರುವ ಕರಾವಳಿ ಘಟ್ಟದ ಕೆಳಗಿನ ಭಾಗ. ಅದರ ಪೂರ್ವ ದಿಕ್ಕಿಗೆ ಗೋಡೆಯಂತೆ ದಕ್ಷಿಣೋತ್ತರವಾಗಿ ಹಬ್ಬಿದ ಜಂಜುಕಲ್ಲಿನ ಸಹ್ಯಾದ್ರಿ ಶ್ರೇಣಿ. ಬೆಟ್ಟದ ತಪ್ಪಲಿನಿಂದ ಹರಿದು ಸಮುದ್ರ ಸೇರುವ ಕಾಳಿ, ಗಂಗಾವಳಿ, ಅಘನಾಶಿನಿ, ಶರಾವತಿ ನದಿಗಳು ಸುತ್ತಲೂ ಹಸುರು ಹಾಸಿ ಸೌಂದರ್ಯ ಬೆಳೆಸಿವೆ. ಶಿವಮೊಗ್ಗ ಮತ್ತು ಉತ್ತರ ಕನ್ನಡದ ಗಡಿಯಲ್ಲಿ ಹರಿಯುವ ಶರಾವತಿ, ಗೇರುಸೊಪ್ಪೆಯ ಬಳಿ 252ಮೀ ಕೆಳಗೆ ದುಮುಕಿ ಜಗತ್ಪ್ರಸಿದ್ಧ ಜೋಗ್ ಜಲಪಾತವನ್ನು ನಿರ್ಮಿಸಿದೆ. ಅಘನಾಶಿನಿ ನದಿಯ ಉಂಚಳ್ಳಿ, ಗಂಗಾವಳಿ ನದಿಯ ಮಾಗೋಡು, ಕಾಳಿನದಿಯ ಲಾಲಗುಳಿ, ಗಣೀಶಪಾಲ ಹೊಳೆಯ ಶಿವಗಂಗಾ ಜಲಪಾತಗಳೂ ನಿಸರ್ಗ ಸೌಂದರ್ಯದಿಂದ ಕೂಡಿವೆ. ಇವಲ್ಲದೆ ಸುಸುಬ್ಬಿಯಂಥ ಅನೇಕ ಚಿಕ್ಕಪುಟ್ಟ ಜಲಪಾತಗಳಿವೆ. ಜೋಗದ ಶರಾವತಿ ಕಮರಿಯಲ್ಲಿ ಕಟ್ಟಲಾದ ಮಹಾತ್ಮಗಾಂಧಿ ವಿದ್ಯುತ್ ಉತ್ಪಾದನಾ ಕೇಂದ್ರವಿದೆ (1948). ಇಲ್ಲಿಂದ ಸ್ವಲ್ಪ ದೂರದಲ್ಲಿರುವ ಶರಾವತಿ ವಿದ್ಯುತ್ ಉತ್ಪಾದನಾ ಕೇಂದ್ರ (1965) ಏಷ್ಯದಲ್ಲಿ ಅತ್ಯಂತ ದೊಡ್ಡ ವಿದ್ಯುತ್ ಉತ್ಪಾದನಾ ಕೇಂದ್ರ. ಕಾರವಾರದಿಂದ ಭಟ್ಕಳದವರೆಗೆ ಚಾಚಿಕೊಂಡ ಕರಾವಳಿ ಮರಳುಮಯವಾಗಿದೆ. ಘಟ್ಟದ ಕೆಳಗೆ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕುಗಳಿವೆ. ಘಟ್ಟದ ಮೇಲೆ ಸಿರ್ಸಿ, ಯಲ್ಲಾಪುರ, ಸಿದ್ಧಾಪುರ, ಹಳಿಯಾಳ, ಜೊಯ್ಡ (ಸುಪ), ಮುಂಡಗೋಡ ತಾಲ್ಲೂಕುಗಳಿವೆ. ಕರಾವಳಿಯ ತಾಲ್ಲೂಕುಗಳಲ್ಲಿ ತೆಂಗು ವಿಪುಲವಾಗಿ ಬೆಳೆದರೆ ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಅಡಕೆ ಬೆಳೆಯುತ್ತದೆ. ಇಲ್ಲಿಯ ಹವಾಮಾನ ಹಿತಕರ. ಕರಾವಳಿ ತಾಲ್ಲೂಕುಗಳಲ್ಲಿ ಸೆಖೆ ಹೆಚ್ಚು. ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಹೆಚ್ಚು ತಂಪಾದ ವಾಯುಗುಣವಿದೆ. ಮಳೆಗಾಲ ಜೂನ್ ನಲ್ಲಿ ಆರಂಭಗೊಂಡು ಅಕ್ಟೋಬರ್‌ವರೆಗೂ ಇರುತ್ತದೆ. ವಾರ್ಷಿಕ ಸರಾಸರಿ ಮಳೆ 2,836 ಮಿಮೀ. ಕರಾವಳಿಯಲ್ಲಿ 3,500mm ಸಹ್ಯಾದ್ರಿಯ ಅಂಚಿನಲ್ಲಿ 5,000mm ಮಳೆ ಹೆಚ್ಚು. ಪೂರ್ವಕ್ಕೆ ಹೋದಂತೆ ಮಳೆ ಕಡಿಮೆಯಾಗುತ್ತದೆ. ಜಿಲ್ಲೆಯ ಶೇ.80ರಷ್ಟು ನೆಲ ಅರಣ್ಯಾವೃತ. ಅರಣ್ಯದ ವಿಸ್ತೀರ್ಣ 8,15,057 ಹೆಕ್ಟೇರ್. 10,325 ಹೆಕ್ಟೇರುಗಳಲ್ಲಿ ತಾಳೆ ಬೆಳೆಯುತ್ತಾರೆ. ಸಾಗುವಾನಿ, ಮತ್ತಿ, ಹೊನ್ನೆ, ನಂದಿ ಮೊದಲಾದ ಗಟ್ಟಿ ಮರಗಳಲ್ಲದೆ ಬೆಂಕಿಪೆಟ್ಟಿಗೆಯ ತಯಾರಿಕೆಗೆ ಉಪಯುಕ್ತವಾದ ಮೃದು ಮರಗಳೂ ಶ್ರೀಗಂಧದ ಮರವೂ ಇವೆ. ಬಿದಿರು ಹೇರಳವಾಗಿದೆ. ತೈಲಯುತ ಸಸ್ಯಜಾತಿಗಳೂ ಇವೆ. ಅಳಲೆ, ಸೀಗೆ, ಜೇನು, ಅರಗು, ಗೋಂದು, ಹಾಲ್ಮಡ್ಡಿ ಇವು ಅರಣ್ಯೋತ್ಪನ್ನಗಳು. ರಾಜ್ಯದ ಅರಣ್ಯೋತ್ಪನ್ನದಲ್ಲಿ ಶೇ.65 ಭಾಗ ಈ ಜಿಲ್ಲೆಯಿಂದ ದೊರೆಯುತ್ತದೆ. ಮ್ಯಾಂಗನೀಸ್, ಕಬ್ಬಿಣ, ಸುಣ್ಣದಶಿಲೆ ಜೇಡಿಮಣ್ಣು, ಇಲ್ಮನೈಟ್, ಗಾಜು, ಸಾಬೂನು, ಅಭ್ರಕ, ಬಾಕ್ಸೈಟ್ ಈ ಜಿಲ್ಲೆಯ ಖನಿಜಗಳು. ಜಿಲ್ಲೆಯಲ್ಲಿ ಅನೇಕ ಕಡೆ ಮ್ಯಾಂಗನೀಸ್ ದೊರೆಯುತ್ತದೆ. ಜೋಯ್ಡ ತಾಲ್ಲೂಕಿನ ಕೊಡ್ಲಿಗವಿಗಳು ಮ್ಯಾಂಗನೀಸ್ಗೆ ಪ್ರಸಿದ್ಧವಾಗಿದ್ದರೆ ಹೊನ್ನಾವರ ತಾಲ್ಲೂಕಿನ ಅಪ್ಸರಕೊಂಡದಲ್ಲೂ, ಕುಮಟ ತಾಲ್ಲೂಕಿನ ಯಾಣದಲ್ಲೂ ಕಬ್ಬಿಣದ ಅದಿರಿನ ನಿಕ್ಷೇಪವಿದೆ. ಸಹ್ಯಾದ್ರಿ ಪಾದಭಾಗಗಳಲ್ಲಿ ಕಬ್ಬಿಣವಲ್ಲದೆ ಇತರ ಲೋಹನಿಕ್ಷೇಪಗಳುಂಟು. ಯಾಣ ಮತ್ತಿತರ ಕಡೆಗಳಲ್ಲಿ ಸುಣ್ಣಶಿಲೆದೊರೆಯುತ್ತದೆ. ಹಲವೆಡೆ ಸ್ವರ್ಣಮಕ್ಷಿಕೆ ಬಿಳಿ ಜೇಡು ಇವೆ. ವೃತ್ತಿ ಮತ್ತು ವ್ಯಾಪಾರ ಸಿರ್ಸಿಯು ಜಿಲ್ಲೆಯ ಅತಿದೊಡ್ಡ ವಾಣಿಜ್ಯ ನಗರವಾಗಿದ್ದು, ಜಿಲ್ಲೆಯಲ್ಲಿ ಒಟ್ಟು 118996 ಹೆ. ನಿವ್ವಳ ಬಿತ್ತನೆ ಪ್ರದೇಶವಿದೆ. ಇದರಲ್ಲಿ 22,421 ಹೆ. ಗಳಿಗೆ ನೀರಾವರಿ ಸೌಲಭ್ಯವಿದೆ. ಭತ್ತ, ತೆಂಗು, ಕಬ್ಬು, ಅಡಕೆ, ಮೆಣಸು, ಏಲಕ್ಕಿ, ಬಾಳೆ ಮುಖ್ಯವಾದ ಬೆಳೆಗಳು. ಇವಲ್ಲದೆ ಜಿಲ್ಲೆಯಲ್ಲಿ ಗೋಡಂಬಿ, ಮಾವು, ಹುಣಸೆ, ನಿಂಬೆ, ಅನಾನಸು, ಹಲಸು, ಪಪ್ಪಾಯಿ, ಬಟಾಟೆ, ಬದನೆ, ಕಲ್ಲಂಗಡಿ, ಹೈಬ್ರಿಡ್ ಜೋಳ, ಶೇಂಗಾ ಇತ್ಯಾದಿಗಳನ್ನು ಬೆಳೆಯುತ್ತಾರೆ. ಭತ್ತ 82197 ಹೆ, ಜೋಳ 290 ಹೆ, ಕಬ್ಬು 872 ಹೆ, ಅಡಕೆ 11160 ಹೆ, ತೆಂಗು 5907 ಹೆ, ಗೋಡಂಬಿ 1827 ಹೆ, ಮೆಣಸು 135 ಹೆ, ಮಾವು 1140 ಹೆ, ಬಾಳೆ 7245 ಹೆ, ಏಲಕ್ಕಿ 369ಹೆ, ಅನಾನಸ್ 315 ಹೆ, ಹಲಸು 206 ಹೆ, ಪರಂಗಿ 114.9 ಹೆ, ಹತ್ತಿ 7245 ಹೆನಲ್ಲಿ ಬೆಳೆಸುತ್ತಾರೆ. ಅಡಕೆಯ ತೋಟದಲ್ಲಿ ಏಲಕ್ಕಿ, ಕಾಳುಮೆಣಸು, ಬಾಳೆ ಬೆಳೆಸುತ್ತಾರೆ. ಗದ್ದೆಯಲ್ಲಿ ಕಡಲೆ, ತೊಗರಿ ಮೊದಲಾದ ಧಾನ್ಯಗಳನ್ನೂ ಬೆಳೆಯುತ್ತಾರೆ.ಪಶುಪಾಲನೆಯೂ ರೂಢಿಯಲ್ಲಿದೆ. ಭಟ್ಕಳವು ಮಲ್ಲಿಗೆಗೆ ಹೆಸರುವಾಸಿಯಾಗಿದೆ.ಇಲ್ಲಿ ಮಲ್ಲಿಗೆ ಬೆಳೆಗೆ ಅನುಕೂಲ ವಾತಾವರಣವಿದೆ.ಭಟ್ಕಳ ಮಲ್ಲಿಗೆಯು ದೇಶ ವಿದೇಶಗಳಿಗೂ ರಫ್ತಾಗುತ್ತದೆ. ಈ ಜಿಲ್ಲೆಯಲ್ಲಿ ಮೀನುಗಾರಿಕೆ ಒಂದು ಮುಖ್ಯ ಉದ್ಯೋಗ. ಒಂದು ಕಾಲದಲ್ಲಿ ಹರಿಕಾಂತ, ತಾಂಡೇಲ, ಖಾರ್ವಿ, ಗಾಬಿತ, ಅಂಬಿಗ, ಮೊಗೇರ, ಆಗೇರ, ಕ್ರಿಶ್ಚಿಯನ್ ದಾಲಜಿಗಳಷ್ಟೇ ಈ ವೃತ್ತಿಯನ್ನವಲಂಬಿಸಿದ್ದರೆ ಇತ್ತೀಚೆಗೆ ಸಾಮಾನ್ಯವಾಗಿ ಎಲ್ಲ ಜಾತಿಯವರೂ ಮೀನು ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಇವರು ಕರಾವಳಿ ಪ್ರದೇಶದ 118 ಹಳ್ಳಿಗಳಲ್ಲಿದ್ದಾರೆ. ಸಮುದ್ರದಿಂದ ಮೀನು ಹಿಡಿಯುವ ಕೇಂದ್ರಗಳೆಂದರೆ ಅರ್ಗಾ, ಭಟ್ಕಳ, ಬಿಣಗಾ, ಚೆಂಡಿಯೆ, ಗಂಗಾವಳಿ, ಕಾರವಾರ, ಹೊನ್ನಾವರ, ಖಾರವಿ, ಕೇಣಿ, ಕೋಡಾರ್, ಕುಮಟ, ಹೊಲನಗದ್ದೆ, ಮಾಜಾಳಿ, ಮಂಕಿ, ಮುರ್ಡೇಶ್ವರ, ಶಿರಾಲಿ,ಮತ್ತು ತದಡಿ. ಸಾಗರ ಮೀನುಗಾರಿಕೆಯಲ್ಲಿ 30094 ಟನ್ ಹಿಡಿದರೆ, ಸಿಹಿನೀರಿನಲ್ಲಿ 249ಟನ್ ಮೀನು ಹಿಡಿಯಲಾಗಿದೆ (2001). ಮರ ಕೊಯ್ಯುವ ಗಿರಣಿ, ಹಂಚಿನ ಕಾರ್ಖಾನೆ, ನೇಯ್ಗೆ, ಮೇಣದಬತ್ತಿಯ ಉತ್ಪಾದನೆ, ಸಾಬೂನು ತಯಾರಿಕೆ, ವಾಹನ ದುರಸ್ತಿ, ಮುದ್ರಣ, ಕೆತ್ತನೆಯ ಕೆಲಸ, ಚಿನ್ನ ಬೆಳ್ಳಿಯ ಕೆಲಸ, ಬುಟ್ಟಿ, ಚಾಪೆ ಹೆಣೆಯುವಿಕೆ, ಬೆತ್ತದ ಹೆಣಿಗೆ, ಜೇನು ಸಾಕಣೆ, ಕೋಳಿ ಕುರಿ ಸಾಕಣೆ, ರೇಷ್ಮೆ, ಚರ್ಮದ ಉದ್ಯೋಗ, ವ್ಯಾಪಾರ, ಏಜೆನ್ಸಿಗಳಲ್ಲಿ ಜನ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಮಂಜುಗೆಡ್ಡೆ ತಯಾರಿಕಾ ಕಾರ್ಖಾನೆಗಳು 52 ಇವೆ. ದಾಂಡೇಲಿಯಲ್ಲಿಯೂ ಕಾಗದದ ಕಾರ್ಖಾನೆ ದೊಡ್ಡ ಉದ್ದಿಮೆ. ಅಲ್ಲದೆ ಪ್ಲೈವುಡ್, ಫೆರೋಮ್ಯಾಂಗನೀಸ್ ಉದ್ದಿಮೆಗಳೂ ಇವೆ. ಕಾರವಾರ, ಬೆಲೆಕೇರಿ, ತದಡಿ, ಕುಮಟ, ಹೊನ್ನಾವರ, ಭಟ್ಕಳ-ಇವು ಮುಖ್ಯ ಬಂದರುಗಳು. ಕಾರವಾರದಲ್ಲಿ ಸರ್ವಋತು ಬಂದರನ್ನು ಬೃಹತ್ತಾಗಿ ಕಟ್ಟಲಾಗಿದೆ. ಬಳ್ಳಾರಿ ಪ್ರದೇಶದ ಕಬ್ಬಿಣದ ಅದಿರನ್ನು ಸಾಗಿಸಲು ಕಾರವಾರ ಬಂದರು ಉಪಯುಕ್ತವಾಗುತ್ತದೆ. ಉದ್ದಿಮೆ ಎಂಜಿನಿಯರಿಂಗ್ ಉದ್ಯಮ 15, ರಾಸಾಯನಿಕ ಕಾರ್ಖಾನೆಗಳು 3, ಬಟ್ಟೆ ಕಾರ್ಖಾನೆ 2, ಇತರ ಸಣ್ಣ ಪ್ರಮಾಣದ ಕಾರ್ಖಾನೆಗಳು 66, ಈ ಕಾರ್ಖಾನೆಗಳಲ್ಲಿ ಉದ್ಯೋಗಿಗಳು 13,243. ಜಿಲ್ಲೆಯಲ್ಲಿ ಕೆಲವು ಬೃಹತ್ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳಿವೆ. ವೆಸ್ಟ್‌ಕೋಸ್ಟ್‌ ಪೇಪರ್ ಮಿಲ್ಸ್‌, ದಾಂಡೇಲಿಯ ಇಂಡಿಯನ್ ಪ್ಲೈವುಡ್ ಮ್ಯಾನ್ಯುಫ್ಯಾಕ್ಚರಿಂಗ್ ಕಂಪನಿ, ಜೈಹಿಂದ್ ಸಾಮಿಲ್, ಬಳ್ಳಾಪುರ ಇಂಡಸ್ಟ್ರಿಸ್ ಲಿ., ಬಿಣಗಾದ, ದಾಂಡೇಲಿ ಫೆರೊ ಅಲಾಯ್ಸ್‌ ಪ್ರೈ.ಲಿ. ಇವು ಮುಖ್ಯ ಉದ್ದಿಮೆಗಳು. ಇವಲ್ಲದೆ ಸಣ್ಣ ಕೈಗಾರಿಕಾ ಘಟಕಗಳು, ಖಾದಿ ಗ್ರಾಮೋದ್ಯೋಗ ಕರಕುಶಲ ಘಟಕಗಳು ಹಾಗೂ ಕೈಮಗ್ಗದ ಘಟಕಗಳು ಜಿಲ್ಲೆಯಲ್ಲಿವೆ, ಹೆಂಚು ಕಾರ್ಖಾನೆಗಳಿವೆ. ಮೀನುಗಾರಿಕೆ ಘಟಕಗಳು, ದೋಣಿ ಕಟ್ಟುವ ಘಟಕಗಳು, ಆಹಾರ ಸಂಸ್ಕರಣ ಘಟಕಗಳು, ರಾಸಾಯನಿಕ ಘಟಕಗಳು ಚರ್ಮ ಮತ್ತು ರಬ್ಬರ್ ಘಟಕಗಳು, ಗಂಧ ಚಂದನ ಕೆತ್ತನೆಯ ಘಟಕಗಳು, ಮುದ್ರಣ ಘಟಕಗಳು, ನೂಲುವ ನೇಯುವ ಘಟಕಗಳು, ಜೇನು ಸಾಕಣೆ, ಬೆತ್ತ ಬಿದಿರುಗಳಿಂದ ವಸ್ತುಗಳನ್ನು ತಯಾರಿಸುವ ಘಟಕಗಳು, ಎಣ್ಣೆ ತಯಾರಿಕಾ ಘಟಕಗಳು, ಕುಂಬಾರಿಕೆ ಮುಂತಾದ ಅನೇಕ ಉದ್ಯಮಗಳಿವೆ. ಇವುಗಳಲ್ಲಿ ಕೆಲವು ಗುಡಿ ಕೈಗಾರಿಕೆಗಳು. ಸಾರಿಗೆ-ಸಂಪರ್ಕ ಜಿಲ್ಲೆಯಲ್ಲಿ 329 ಕಿ.ಮೀ ಗಳ ರಾಷ್ಟ್ರೀಯ ಹೆದ್ದಾರಿ, 863 ಕಿ.ಮೀ ಗಳ ರಾಜ್ಯ ಹೆದ್ದಾರಿ ಮಾರ್ಗಗಳಿವೆ. ಜಿಲ್ಲಾ ಮುಖ್ಯ ರಸ್ತೆಗಳು 1039 ಕಿ.ಮೀ. 24 ಭಾರೀ ಸೇತುವೆಗಳಿವೆ. ಪಶ್ಚಿಮ ಕರಾವಳಿಯ ಹೆದ್ದಾರಿ ದಕ್ಷಿಣಕ್ಕೆ ಕನ್ಯಾಕುಮಾರಿಯವರೆಗೆ, ಉತ್ತರಕ್ಕೆ ಕಾಶ್ಮೀರದವರೆಗೆ ಸಂಪರ್ಕ ಕಲ್ಪಿಸುತ್ತದೆ. ಕಾರವಾರದಿಂದ ಹುಬ್ಬಳ್ಳಿಯ ಕಡೆಗೆ ಹೋಗುವ ಹೆದ್ದಾರಿ ಅನೇಕ ನಗರಗಳ ಸಂಪರ್ಕ ಕಲ್ಪಿಸುತ್ತದೆ. ನಗರಗಳೊಂದಿಗೆ ಹಳ್ಳಿಗಳ ಸಂಪರ್ಕವನ್ನು ಕಲ್ಪಿಸುವ ರಸ್ತೆಗಳೂ ಇವೆ. ಘಟ್ಟದ ಮೇಲೆ ಸಿದ್ದಾಪುರದಿಂದ ಹುಬ್ಬಳ್ಳಿಗೆ, ಕಾರವಾರಕ್ಕೆ, ದಾಂಡೆಲಿಗೆ, ಯಲ್ಲಾಪುರಕ್ಕೆ ಸಂಪರ್ಕ ದೊರಕಿಸುವ ರಸ್ತೆಗಳಿವೆ. ಕೊಚ್ಚಿ ಮುಂಬೈಗಳಿಗೆ ಹೋಗುವ ಕೊಂಕಣ ರೈಲ್ವೆ ಈ ಜಿಲ್ಲೆಯ ಮೂಲಕ ಹೋಗುತ್ತದೆ. ಜಿಲ್ಲೆಯಲ್ಲಿ 179ಕಿಮೀ ಉದ್ದದ ರೈಲು ಮಾರ್ಗವಿದೆ. 16 ರೈಲು ನಿಲ್ದಾಣಗಳಿವೆ. ಇವುಗಳಲ್ಲಿ ಮುಖ್ಯವಾದವು-ಭಟ್ಕಳ, ಹೊನ್ನಾವರ, ಕುಮಟ, ಗೋಕರ್ಣ, ಅಂಕೋಲ, ಕಾರವಾರ. ಜಿಲ್ಲೆಯಲ್ಲಿ 497 ಅಂಚೆ ಕಚೇರಿಗಳು 152 ದೂರವಾಣಿ ವಿನಿಮಯ ಕೇಂದ್ರಗಳು ಮತ್ತು 90,234 (2006) ದೂರವಾಣಿ ಸಂಪರ್ಕಗಳಿವೆ. ಇದಲ್ಲದೆ ಜಲಮಾರ್ಗದ ಸಂಪರ್ಕವೂ ಇದೆ. ಜನಸಂಖ್ಯೆ ಜಿಲ್ಲೆಯ ಒಟ್ಟು ಜನಸಂಖ್ಯೆ 13,53,644 ಇದರಲ್ಲಿ 9,65,731 ಜನ ಹಳ್ಳಿಯಲ್ಲಿ ವಾಸಿಸುತ್ತಾರೆ. ಇವರಲ್ಲಿ 4,89,908 ಗಂಡಸರು, 4,75,823 ಹೆಂಗಸರು. ಜನಸಾಂದ್ರತೆ ಪ್ರತಿ ಚ.ಕಿಮೀ.ಗೆ 132 ಜನರು, ಲಿಂಗಾನುಪಾತ ಸಾವಿರ ಪುರುಷರಿಗೆ 970 ಮಹಿಳೆಯರು ಈ ಜಿಲ್ಲೆಯಲ್ಲಿ ಹಿಂದುಗಳೂ (ಶೇ. 83.6) ಮುಸಲ್ಮಾನರೂ (ಶೇ.11.9) ಕ್ರೈಸ್ತರೂ (ಶೇ.3.3) ಇದ್ದಾರೆ. ಬಹುಸಂಖ್ಯಾತರು ಹಿಂದುಗಳು. ಈ ಜಿಲ್ಲೆಯಲ್ಲಿ ಬೌದ್ಧ, ಜೈನ ಧರ್ಮಗಳೂ ಪ್ರಚಾರವಾದವು. 10-12ನೆಯ ಶತಮಾನಗಳಲ್ಲಿ ನಾಥಪಂಥವೂ 16-18ನೆಯ ಶತಮಾನಗಳಲ್ಲಿ ವೀರಶೈವ ಪಂಥದ ಪ್ರಚಾರವೂ ನಡೆದವು. ಜಿಲ್ಲೆಯಲ್ಲಿ ಕ್ರೈಸ್ತ ಮಂದಿರಗಳೂ ಮಸೀದಿಗಳೂ ಸ್ಮಾರ್ತ, ಜೈನ, ವೀರಶೈವ, ವೈಷ್ಣವ ಮಠಗಳೂ ಇವೆ. ಹಿಂದುಧರ್ಮದ ಹಲವು ಪಂಗಡಗಳಿಗೆ ಸೇರಿದ ನೂರಾರು ದೇವಾಲಯಗಳು ಇವೆ. ನಾಥಪಂಥದ ಅವಶೇಷಗಳು ಅಂಕೋಲ, ಬೆಳಂಬರ್, ಹೊನ್ನೆಬೈಲ, ಅಘನಾಶಿನಿ, ಲಿಂಗೆ, ಮಾಜಾಳಿ, ಯಾಣ, ಕವಳೆಯಲ್ಲಿವೆ. ಶಿಕ್ಷಣ ಜಿಲ್ಲೆಯ ಸಾಕ್ಷರತಾ ಪ್ರಮಾಣ ಶೇ. 84.64: ಪುರುಷರು ಶೇ. 89.63, ಮಹಿಳೆಯರು ಶೇ. 78.39. ಜಿಲ್ಲೆಯಲ್ಲಿ ಮೊದಲು ಜೈನ, ವೀರಶೈವ, ಬ್ರಾಹ್ಮಣ ಸಂಪ್ರದಾಯದ ಪಾಠಶಾಲೆಗಳು ನಡೆಯುತ್ತಿದ್ದವು. ಅದಕ್ಕೆ ಅನೇಕ ಅಗ್ರಹಾರಗಳು ಪ್ರಚಲಿತವಿದ್ದವು. ಅವುಗಳೆಲ್ಲ ಬ್ರಿಟಿಷರ ಆಳಿಕೆಯಲ್ಲಿ ಕೊನೆಗೊಳ್ಳುತ್ತ ಬಂದು 1866 ಸುಮಾರಿಗೆ ಸರ್ಕಾರಿ ಶಾಲೆಗಳು ಆರಂಭವಾದವು. ಹಳಿಯಾಳ, ಕುಮಟ, ಸಿರ್ಸಿಗಳಲ್ಲಿ ಆಂಗ್ಲೊವರ್ನಾಕ್ಯುಲರ್ ಶಾಲೆಗಳಿದ್ದವು. 1866ರಲ್ಲಿ ಒಂದು ಉರ್ದು ಶಾಲೆ ಹಳಿಯಾಳದಲ್ಲಿ ಆರಂಭವಾಯಿತು. 1864ರಲ್ಲಿ ಕಾರವಾರದಲ್ಲಿ ಮೊದಲ ಹೈಸ್ಕೂಲು ಪ್ರಾರಂಭವಾಯಿತು. 1935-36ರಲ್ಲಿ 853 ಪ್ರಾಥಮಿಕ ಶಾಲೆಗಳಿದ್ದವು. 23,465 ಮಂದಿ ಶಿಕ್ಷಣ ಪಡೆಯುತ್ತಿದ್ದರು. ಇವರಲ್ಲಿ 5776 ವಿದ್ಯಾರ್ಥಿನಿಯರು. ಆ ವರ್ಷದಿಂದ ಪರಿಶಿಷ್ಟ ಜಾತಿಯ, ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಲು ವಿಶೇಷ ಗಮನ ಕೊಡಲಾಯಿತು. ಜಿಲ್ಲಾ ಸ್ಕೂಲ್ ಬೋರ್ಡ್ 1944ರಲ್ಲಿ ಆರಂಭವಾಗಿ ಎಲ್ಲ ಶಾಲೆಗಳು ಸ್ಕೂಲ್ ಬೋರ್ಡ್ ಅಧೀನಕ್ಕೆ ಬಂದು ಶಿಕ್ಷಣದಲ್ಲಿ ಒಂದು ಬಗೆಯ ಶಿಸ್ತು ಬಂತು. ಸ್ಕೂಲ್‌ಬೋರ್ಡಿನಿಂದ ನಿಯಂತ್ರಣಗೊಂಡ ಶಿಕ್ಷಣ ಇಲಾಖೆಯ ಖರ್ಚು ಪುರೈಸಲು ಸ್ಥಳೀಯ ಆಡಳಿತಗಳು ವಿದ್ಯಾ ಕರ ಸಂಗ್ರಹಿಸತೊಡಗಿದವು. ಕಡ್ಡಾಯ ಪ್ರಾಥಮಿಕ ಶಿಕ್ಷಣ ಕಾನೂನು (1918) ಜಾರಿಗೆ ಬಂದಾಗ ಹಳಿಯಾಳ ಮತ್ತು ಹೊನ್ನಾವರ ಪುರಸಭೆಗಳು ಈ ಯೋಜನೆಯನ್ನು ಜಾರಿಗೆ ತಂದವು. 1947ರಲ್ಲಿ ಮುಂಬಯಿ ಪ್ರಾಥಮಿಕ ಶಿಕ್ಷಣ ಅಧಿನಿಯಮದಂತೆ 7-11 ವರ್ಷದ ಮಕ್ಕಳು ಶಾಲೆಗೆ ಹೋಗುವುದು ಕಡ್ಡಾಯವಾಯಿತು. ರಾಜ್ಯ ಪುನಾರಚನೆಯ ಕಾಲದಲ್ಲಿ 969 ಪ್ರಾಥಮಿಕ ಶಾಲೆಗಳೂ 71779 ವಿದ್ಯಾರ್ಥಿಗಳೂ 1759 ಶಿಕ್ಷಕರೂ ಇದ್ದರು. 1900ರ ವೇಳೆಗೆ ಘಟ್ಟದ ಕೆಳಗೆ ಐದು ಪ್ರೌಢಶಾಲೆಗಳೂ ಘಟ್ಟದ ಮೇಲೆ ಸಿರ್ಸಿಯಲ್ಲಿ ಒಂದೇ ಒಂದು ಪ್ರೌಢಶಾಲೆಯೂ ಇದ್ದವು. 1947ರ ವರೆಗೂ ಶಿಕ್ಷಣ ಒಂದು ತೀವ್ರ ಆಸಕ್ತಿಯ ವಿಷಯವಾಗಿರಲಿಲ್ಲವೆಂಬುದು ಸ್ಪಷ್ಟವಾಗುತ್ತದೆ. ಅದುವರೆಗೆ ಜಿಲ್ಲೆಯಲ್ಲಿ ಪದವಿಯ ಮಟ್ಟದ ಉನ್ನತ ಶಿಕ್ಷಣದ ಸೌಲಭ್ಯಗಳಿರಲಿಲ್ಲ. ಸರ್ಕಾರದಿಂದ ಎಲ್ಲವನ್ನೂ ಅಪೇಕ್ಷಿಸುವುದು ಸಾಧ್ಯವಿಲ್ಲವೆಂದು ಮನಗಂಡ ಸಾರ್ವಜನಿಕರು 1947ರಲ್ಲಿ ಕುಮಟದಲ್ಲಿ ಕೆನರಾ ಎಜುಕೇಶನ್ ಸೊಸೈಟಿಯನ್ನು ಆರಂಭಿಸಿದರು. 1919ರಲ್ಲಿ ಭಟ್ಕಳದಲ್ಲಿ ಆರಂಭವಾದ ಅಂಜುಮನ್ ಎಜುಕೇಶನ್ ಟ್ರಸ್ಟ್‌, 1952ರಲ್ಲಿ ಸಿದ್ದಾಪುರದಲ್ಲಿ ಸ್ಥಾಪಿಸಿದ ಸಹಕಾರಿ ಶಿಕ್ಷಣ ಪ್ರಸಾರ ಸಮಿತಿ, 1954ರಲ್ಲಿ ಯಲ್ಲಾಪುರದಲ್ಲಿ ಆರಂಭವಾದ ಶಿವಾಜಿ ಎಜುಕೇಶನ್ ಸೊಸೈಟಿ, 1961ರಲ್ಲಿ ಸಿರ್ಸಿ ಯಲ್ಲಿ ಆರಂಭಿಸಲಾದ ಮಾಡರ್ನ್ ಎಜುಕೇಶನ್ ಸೊಸೈಟಿ, 1962ರಲ್ಲಿ ಅಂಕೋಲದಲ್ಲಿ ಆರಂಭಿಸಲಾದ ನೂತನ ಶಿಕ್ಷಣ ಸಭಾ ಟ್ರಸ್ಟ್‌, 1970ರಲ್ಲಿ ದಾಂಡೇಲಿಯಲ್ಲಿ ಆರಂಭಿಸಿದ ದಾಂಡೇಲಿ ಎಜುಕೇಶನ್ ಸೊಸೈಟಿ, 1964ರಲ್ಲಿ ಹೊನ್ನಾವರದಲ್ಲಿ ಮಹಾವಿದ್ಯಾಲಯ ಸ್ಥಾಪಿಸಿದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜುಕೇಶನ್ ಸೊಸೈಟಿ, 1953ರಲ್ಲಿ ದಿನಕರದೇಸಾಯಿ ನೇತೃತ್ವದಲ್ಲಿ ಸ್ಥಾಪಿತವಾದ ಕೆನರ ವೆಲ್ಫೇರ್ ಟ್ರಸ್ಟ್‌ ಮೊದಲಾದ ಅನೇಕ ಶಿಕ್ಷಣ ಸಂಸ್ಥೆಗಳು ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸಿದವು. 1949ರಲ್ಲಿ ಕುಮಟದಲ್ಲಿ ಕೆನರಾ ಕಾಲೇಜು ಆರಂಭವಾಗಿ ಅನಂತರ ಅದು ಎ.ವಿ.ಬಾಳಿಗಾ ಕಾಲೇಜ್ ಎಂದು ನಾಮಕರಣ ಗೊಂಡಿತು. 1961ರಲ್ಲಿ ಕಾರವಾರದಲ್ಲಿ ಕಾಲೇಜು ಆರಂಭವಾಯಿತು. ಮುಂದಿನ ಹದಿನೈದು ವರ್ಷಗಳಲ್ಲಿ 13 ಪದವಿ ಮಹಾವಿದ್ಯಾಲಯಗಳು, 3 ವೃತ್ತಿಪರ ಮಹಾವಿದ್ಯಾಲಯಗಳು, 3 ಬಿ.ಇಡಿ. ಮಹಾ ವಿದ್ಯಾಲಯಗಳು, ಒಂದು ಕಾನೂನು ಮಹಾವಿದ್ಯಾಲಯ ಆರಂಭವಾದವು. 1984-85ರಿಂದ ಸಿರ್ಸಿ ಕುಮಟ ಮತ್ತು ದಾಂಡೇಲಿಯಲ್ಲಿ ಪಾಲಿಟೆಕ್ನಿಕ್ಗಳು ನಡೆಯುತ್ತಿವೆ. 1958ರಲ್ಲಿ ಕಾರವಾರದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆರಂಭವಾಯಿತು. ಈಗ ಈ ಜಿಲ್ಲೆಯ ಭಟ್ಕಳದಲ್ಲಿ ಒಂದು ಎಂಜಿನಿಯರಿಂಗ್ ಕಾಲೇಜ್ ಇದೆ. ಸಿದ್ದಾಪುರದಲ್ಲೊಂದು ಆಯುರ್ವೇದ ಮಹಾವಿದ್ಯಾಲಯವಿದೆ. ಸಿರ್ಸಿಯಲ್ಲಿ ಅರಣ್ಯ ವಿಜ್ಞಾನ ಕಾಲೇಜು ಇದೆ. 1937ರಲ್ಲಿ ಮುಂಬಯಿ ಸರ್ಕಾರದಿಂದ ಅನುದಾನಿತವಾದ ವಯಸ್ಕರ ಶಿಕ್ಷಣ ಸಮಿತಿಯ ರಚನೆಯಾಗಿತ್ತು. 1947-56ರ ಅವಧಿಯಲ್ಲಿ ಸಮುದಾಯ ಶಿಕ್ಷಣಕ್ಕೆ ಆದ್ಯತೆ ನೀಡಿದ್ದರಿಂದ 4 ತಿಂಗಳ ಮತ್ತು ಆರು ತಿಂಗಳ ಅವಧಿಗಳ ಸಾಕ್ಷರತಾ ವರ್ಗಗಳು ಆರಂಭವಾದವು. 1980ರಲ್ಲಿ ಸಿರ್ಸಿಯಲ್ಲಿ ವಯಸ್ಕರ ಶಿಕ್ಷಣಕ್ಕೆ ಯೋಜನಾ ಕಚೇರಿ ತೆರೆದ ಅನಂತರ ವಯಸ್ಕರ ಶಿಕ್ಷಣದತ್ತ ಹೆಚ್ಚಿನ ಗಮನ ಹರಿಯಿತು. ಈಗ 150 ವಯಸ್ಕರ ಶಿಕ್ಷಣ ಕೇಂದ್ರಗಳೂ 150 ಸಾಕ್ಷರೋತ್ತರ ತರಬೇತಿ ಕೇಂದ್ರಗಳೂ ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರದ ಯೋಜನೆಯಡಿ ನವೋದಯ ಶಾಲೆಯೂ ನಡೆಯುತ್ತಿವೆ.ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ಶಿಕ್ಷಣ ಖಾತೆ 1981-82ರಲ್ಲಿ ಪ್ರೌಢಶಾಲೆಯ 65 ಶಿಕ್ಷಕರಿಗೆ ತರಬೇತು ನೀಡಿ ಅವರನ್ನು ಕೆರಿಯರ್ ಮಾಸ್ಟರ್ಸ್‌ ಎಂದು ಕರೆದುದಲ್ಲದೆ ಬಿ.ಎಡ್. ವಿದ್ಯಾರ್ಥಿಗಳಿಗೂ ಈ ವಿಷಯ ಪರಿಚಯಿಸಿತು. ಜಿಲ್ಲೆಯಲ್ಲಿ 2292 ಪ್ರಾಥಮಿಕ ಶಾಲೆಗಳು, 231 ಪ್ರೌಢಶಾಲೆಗಳೂ 63 ಪದವಿಪೂರ್ವ ಕಾಲೇಜುಗಳೂ 28 ಸಾಮಾನ್ಯ ಶಿಕ್ಷಣ ಕಾಲೇಜುಗಳು, 5 ಪಾಲಿಟೆಕ್ನಿಕ್ಗಳು, 168 ಗ್ರಂಥಾಲಯಗಳು ಇವೆ (2000). ಜಿಲ್ಲೆಯಲ್ಲಿ 11 ಅಲೋಪತಿ ಆಸ್ಪತ್ರೆಗಳು, 3 ಭಾರತೀಯ ವೈದ್ಯ ಪದ್ಧತಿಯ ಆಸ್ಪತ್ರೆಗಳು, 61 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 120 ಕುಟುಂಬ ಕಲ್ಯಾಣ ಕೇಂದ್ರಗಳು ಇವೆ. ಕಲೆ ಮತ್ತು ಸಂಸ್ಕೃತಿ ಈ ಜಿಲ್ಲೆಯಲ್ಲಿ ಹೆಚ್ಚು ಸಂಖ್ಯೆಯ ಜನ ಕನ್ನಡ ಮಾತನಾಡುವವರು. ಕೊಂಕಣಿ, ಉರ್ದು, ಮರಾಠಿ ಮಾತನಾಡುವವರೂ ಗಣನೀಯ ಸಂಖ್ಯೆಯಲ್ಲಿದ್ದಾರೆ. ತೆಲುಗು, ತಮಿಳು, ಮಲಯಾಳಂ, ತುಳು, ರಾಜಸ್ತಾನಿ, ಕೊಡವ, ಹಿಂದಿ, ಗುಜರಾತಿ, ಸಿಂಧಿ, ನೇಪಾಳಿ, ಬಂಗಾಳಿ, ಪಂಜಾಬಿ, ಒರಿಯ, ಪರ್ಷಿಯನ್ ಭಾಷೆ ಮಾತನಾಡುವವರನ್ನೂ ಕಾಣಬಹುದು. ಉತ್ತರ ಕನ್ನಡ ಜಿಲ್ಲೆ ಜನಪದ ಸಂಸ್ಕೃತಿಯ ಬೀಡಾಗಿದೆ. ಹಾಲಕ್ಕಿ, ಹಸಲರು, ನಾಮಧಾರಿ, ನವಾಯತರು, ಸಿದ್ಧಿ, ಹವ್ಯಕ, ಗೊಂಡರು, ಮುಕ್ರಿ, ಸಾರಸ್ವತ, ಪಟಗಾರ, ಭಜಂತ್ರಿ, ದೈವಜ್ಞ (ಜನಿವಾರರು), ಗವಳಿ, ಮೀನುಗಾರರ ಉಪಸಂಸ್ಕೃತಿ ಗಳು ಇವೆ. ಇವರ ಹಾಡು-ಕುಣಿತ-ಹಬ್ಬಗಳು ಮನಮೋಹಕ. ಇಲ್ಲಿ ಜನಪದ ಗೀತೆಗಳನ್ನು ಸಂಗ್ರಹಿಸಿದ ಪ್ರಮುಖರಲ್ಲಿ ವಿ.ವೆ.ತೊರ್ಕೆ, ಮ.ಗ.ಶೆಟ್ಟಿ, ಜಿ.ಆರ್.ಹೆಗಡೆ, ಎಲ್.ಆರ್.ಹೆಗಡೆ, ಎನ್.ಆರ್.ನಾಯಕ, ಫಾದರ್ಸಿ.ಸಿ.ಎ.ಪೈ, ಎಲ್.ಜಿ.ಭಟ್ಟ, ಶಾಂತಿನಾಯಕ, ವಿ.ಗ.ನಾಯಕ ಮೊದಲಾದವರು ಪ್ರಮುಖರು. ಈ ಜಿಲ್ಲೆಯ ರಂಗಕಲೆಗಳಲ್ಲಿ ಯಕ್ಷಗಾನ ವಿಶಿಷ್ಟ ಸ್ಥಾನ ಗಳಿಸಿದೆ. ಕರ್ಕಿ ಪರಮಯ್ಯ ಹಾಸ್ಯಗಾರ, ಕೆರೆಮನೆ ಶಿವರಾಮ ಹೆಗಡೆ, ಕೆರೆಮನೆ ಮಹಾಬಲ ಹೆಗಡೆ, ಕೆರೆಮನೆ ಶಂಭು ಹೆಗಡೆ ಚಿಟ್ಟಾಣಿ ರಾಮಚಂದ್ರ ಹೆಗಡೆ, ಎಕ್ಟರ್ ಜೋಶಿ, ಕೆರೆಮನೆ ಗಜಾನನ ಹೆಗಡೆ, ಪಿ.ವಿ.ಹಾಸ್ಯಗಾರ, ನಾರಾಯಣ ಹಾಸ್ಯಗಾರ, ಕೃಷ್ಣ ಹಾಸ್ಯಗಾರ, ಕೊಂಡದಕುಳಿ ರಾಮ ಹೆಗಡೆ, ಲಕ್ಷ್ಮಣ ಹೆಗಡೆ, ಮುರೂರು ದೇವರು ಹೆಗಡೆ, ಗೋಡೆ ನಾರಾಯಣ ಹೆಗಡೆ, ಡಿ.ಜಿ.ಹೆಗಡೆ, ಶಿರಳಗಿ ಭಾಸ್ಕರ ಜೋಶಿ, ಬಳ್ಳುರ ಕೃಷ್ಣಯಾಜಿ, ವೆಂಕಟೇಶ ಜಲವಳ್ಳಿ, ಕಡತೋಕ ಮಂಜುನಾಥ ಭಾಗವತ, ನೆಬ್ಬೂರು ನಾರಾಯಣ ಭಾಗವತ ಪ್ರಮುಖ ಕಲಾವಿದರು. ಚಿಟ್ಟಾಣಿ ರಾಮಚಂದ್ರ ಹೆಗಡೆಯವರಿಗೆ ಜಾನಪದ ಶ್ರೀ ಪ್ರಶಸ್ತಿ ಬಂದಿದೆ (2004). ತಾಳಮದ್ದಳೆಯ ಕಲಾವಿದರು ಅನೇಕರಿದ್ದಾರೆ. ನಾಟಕ ಕ್ಷೇತ್ರದಲ್ಲಿ ಹುಲಿಮನೆ ಸೀತಾರಾಮ ಶಾಸ್ತ್ರೀ ಜಯಕರ್ನಾಟಕ ನಾಟಕ ಮಂಡಳಿ ಸ್ಥಾಪಿಸಿ ನಡೆಸಿದರು. ಸುಗ್ಗಿಕುಣಿತ, ಗುಮಟೆಯ ಪಾಂಡು, ದೋಣಿಯ ಹಾಡು, ಬೆಸ್ತರ ಪದ, ಜನಪದ ಗೀತೆಗಳು, ಸಿದ್ಧಿಯರ ಕುಣಿತ- ಹಾಡುಗಳೂ ಜಿಲ್ಲೆಯ ಜನರನ್ನು ಮನರಂಜಿಸುತ್ತ ಬಂದಿವೆ. ಸಾಹಿತ್ಯ ಸಾಹಿತ್ಯ ಕ್ಷೇತ್ರವನ್ನು ಕರ್ಕಿ ವೆಂಕಟರಮಣಶಾಸ್ತ್ರಿ ಸೂರಿ, ಜಿ.ಆರ್.ಪಾಂಡೇಶ್ವರ, ಗೌರೀಶ ಕಾಯ್ಕಿಣಿ, ಯಶವಂತ ಚಿತ್ತಾಲ, ಬಿ.ಎಚ್.ಶ್ರೀಧರ,ಶಾಂತಿನಾಥ ದೇಸಾಯಿ, ಸು.ರಂ.ಎಕ್ಕುಂಡಿ, ಅರವಿಂದ ನಾಡಕರ್ಣಿ, ಸ.ಪ.ಗಾಂವಕರ್, ಕೃಷ್ಣಾನಂದ ಕಾಮತ್, ಪ.ಸು.ಭಟ್ಟ, ಸುಂದರ ನಾಡಕರ್ಣಿ, ವಿ.ಜಿ.ಭಟ್ಟ, ದಿನಕರ ದೇಸಾಯಿ, ವಿ.ಜಿ.ಶಾನಭಾಗ, ಶಾ.ಮಂ.ಕೃಷ್ಣರಾಯ, ಗಂಗಾಧರ ಚಿತ್ತಾಲ, ಜಿ.ಜಿ.ಹೆಗಡೆ, ಜಿ.ಎಸ್.ಭಟ್ಟ, ಜಯಂತ ಕಾಯ್ಕಿಣಿ, ನಿರಂಜನ ವಾನಳ್ಳಿ, ರಾಜೀವ ಅಜ್ಜಿಬಳ, ವಿಷ್ಣು ನಾಯ್ಕ,ಶಾಂತಾರಾಮ ನಾಯಕ ಹಿಚಕಡ , ರಾಮಕೃಷ್ಣ ಗುಂದಿ ಸಮೃದ್ಧಗೊಳಿಸಿದ್ದಾರೆ. ಹೊಸ ತಲೆಮಾರಿನ ಶಿವಲೀಲಾ ಹುಣಸಗಿ ಯಲ್ಲಾಪುರ ಅನೇಕ ಕವಿಗಳೂ ಲೇಖಕರೂ ಭರವಸೆ ಮೂಡಿಸುತ್ತಿದ್ದಾರೆ ಈ ಜಿಲ್ಲೆಯ ಪತ್ರಿಕೆಗಳಲ್ಲಿ ಹವ್ಯಕ ಸುಬೋಧ (1885), ಕಾರವಾರ ಚಂದ್ರಿಕೆ (1885), ಮಕ್ಕಳ ಪತ್ರಿಕೆ ಹಿತೋಪದೇಶ (1888), ಸರಸ್ವತಿ (1900), ವಿನೋದಿನಿ (1904)- ಇವು ಮಾಸಪತ್ರಿಕೆಗಳು. 1919ರಲ್ಲಿ ಕುಮಟದಿಂದ ಕಾನಡಾ ಧುರೀಣ (1922), ನಂದಿನಿ (1925) ಮಾಸ ಪತ್ರಿಕೆ ಮೊದಲು ಗೋಕರ್ಣದಿಂದ ಪ್ರಕಟಿಸಲಾಗುತ್ತಿದ್ದು ಕೆಲಕಾಲ ನಿಂತು 1937 ರಿಂದ ಸಿರ್ಸಿಯಿಂದ ಪ್ರಕಟವಾಗತೊಡಗಿತು. ಶರಣ ಸಂದೇಶ (1931), ನವಚೇತನ (1941), ಸಾಧನ (1949) ಹೊನ್ನಾವರದಿಂದ ಪ್ರಕಟವಾಗುತ್ತಿತ್ತು. ಮಲಯವಾಣಿ (1955) ವಾರ್ಷಿಕ ಪತ್ರಿಕೆ. 1956ರಲ್ಲಿ ಭಾಮಾ ಮಾಸ ಪತ್ರಿಕೆ ಸಿರ್ಸಿಯಿಂದ ಪ್ರಕಟವಾಗ ತೊಡಗಿತು. 1957ರಲ್ಲಿ ಸಿರ್ಸಿಯಿಂದ ಪ್ರಕಟವಾಗುತ್ತಿದ್ದ ನಗರವಾಣಿ ಅಲ್ಪಾಯುವಾಯಿತು. ಸಹಕಾರಿ ಸಮಾಜ (1979), ಯಕ್ಷಗಾನ (1959), ಗೋಕರ್ಣ ಗೋಷ್ಟಿ (1959), ಸ್ವತಂತ್ರವಾಣಿ (1960), ಮಧುವನ (1960), ಗ್ರಾಮಜೀವನ, ಸಮಾಜ (1965), ಸಂಘಟನೆ, ರಮಣ ಸಂದೇಶ, (1971), ಸಿರ್ಸಿ ಸಮಾಚಾರ, ಸಹಚರ, ಸಮನ್ವಯ (1975) ಇವಲ್ಲದೆ ಕಡಲಧ್ವನಿ (1983), ಆಚಾರ (1980), ಕರಾವಳಿ ಗ್ರಾಮ ವಿಕಾಸ (1987), ಗ್ರಾಮ ಭಾರತಿ ಅಭಯ (1965), ನುಡಿಜೇನು (1968), ಗಿರಿಘರ್ಜನೆ, ಯುಗವಾಣಿ (1964), ಸಮಾಜವಾಣಿ (1965), ಚುನಾವಣೆ, ಆಧ್ಯಾತ್ಮಿಕ ಪತ್ರಿಕೆ ಜೀವೋತ್ತಮ ಉಲ್ಲೇಖನೀಯ. ಮುನ್ನಡೆ (1988) ದಿನಪತ್ರಿಕೆಯಾಗಿ 2000ದಲ್ಲಿ ನಿಂತುಹೊಯಿತು. ಜಿಲ್ಲೆಯ ಮೊದಲ ದೈನಿಕ ಲೋಕಧ್ವನಿ (1983), ಜನಮಾಧ್ಯಮ (1988), ಧ್ಯೇಯನಿಷ್ಠ ಪತ್ರಕರ್ತ (1991), ಕರಾವಳಿಯ ಮುಂಜಾವು (1994) - ಇವು ಇಂದಿನ ಪ್ರಮುಖ ಪತ್ರಿಕೆಗಳು. ದೀರ್ಘಕಾಲ ನಡೆದ ಪತ್ರಿಕೆಗಳಲ್ಲಿ ಕಾನಡಾವೃತ್ತದ ಸ್ಥಾನ ಅದ್ವಿತೀಯ. ಇದು 1916ರಲ್ಲಿ ಪ್ರಾರಂಭವಾಗಿ ಈಗಲೂ ನಡೆಯುತ್ತಿದೆ. 1946ರಲ್ಲಿ ಆರಂಭವಾದ ನಾಗರಿಕ ಈಗಲೂ ಪ್ರಕಟವಾಗುತ್ತಿದೆ. 1960ರಲ್ಲಿ ಜನತಾ, 1955ರಲ್ಲಿ ದಿನಕರ ದೇಸಾಯಿ ಪ್ರಾರಂಭಿಸಿದ ಜನಸೇವಕ 1972ರ ವರೆಗೆ ನಡೆದು ಅನಂತರ ನಿಂತಿತು. ಶೃಂಗಾರ ಹೊನ್ನಾವರದಿಂದ ಪ್ರಕಟವಾಗುತ್ತಿತ್ತು. ಪ್ರಮುಖ ಪ್ರೇಕ್ಷಣೀಯ ಸ್ಥಳಗಳು ಸಿರ್ಸಿ : ಈ ಜಾಗವು ಪ್ರಶಾ೦ತ ಪರಿಸರ ಹಾಗೂ ಹಚ್ಚ ಹಸಿರಾದ ಕಾಡುಗಳ ರಮ್ಯ ತಾಣವಾಗಿದೆ. ಮಾರಿಕಾಂಬಾ ದೇವಾಲಯ :ಈ ಊರಿನಲ್ಲಿ ಅತಿ ಪ್ರಸಿದ್ಧವಾದ ಶ್ರೀ ಮಾರಿಕಾಂಬ ದೇವಸ್ಥಾನ ಸಹ ಇದೆ.ಶ್ರಿ ಮಾರಿಕಾಂಬೆಯ ಜಾತ್ರೆ ಸಿರ್ಸಿ ಮಾರಿಕಾಂಬಾ ಜಾತ್ರೆ ಎರಡು ವರ್ಷಕ್ಕೊಮ್ಮೆ ಎ೦ಟು ದಿನಗಳ ಕಾಲ ನಡೆಯುತ್ತದೆ. ಈ ಊರಿನ ಸನಿಹ ಇರುವ ಕೆಲವು ರಮಣೀಯ ಸ್ಥಳಗಳು ಯಾಣ, ಬನವಾಸಿ, ಸೊಂದಾ ಮಠ, ಸೊದೆ (ವಾದಿರಾಜ ಮಠ), ಸಹಸ್ರಲಿ೦ಗ, ಹೊನ್ನಾವರ ಮತ್ತು ಸಿರ್ಸಿಗೆ ಹೊಗುವಾಗ ದಾರಿಯಲ್ಲಿ ಸಿಗುವ ದೇವಿಮನೆ ಘಟ್ಟ ನೊಡಲು ಬಹಳ ಪ್ರೇಕ್ಶಣಿಯವಾಗಿದೆ. ಅಲ್ಲಿನ ಸೊಬಗು ಕ೦ದಕದಲ್ಲಿ ಹರಿಯುತ್ತಿರುವ ಶರಾವತಿ ನದಿ,ದಾರಿಯಲ್ಲಿ ಸಿಗುವ ಕಾಡುಪ್ರಾಣಿಗಳು ಅಲ್ಲಲ್ಲಿ ಹರಿಯುವ ಝರಿಗಳು ಮತ್ತು ತ೦ಪನೆಯ ವಾತಾವರಣದಲ್ಲಿ ಹೊಗುತ್ತಿದ್ದರೆ ಸಮಯ ಕಳೆದದ್ದೆ ಗೊತ್ತಾಗುವದಿಲ್ಲ. ಇ೦ತಹ ಒಂದು ಸು೦ದರವಾದ ದ್ರಶ್ಯವನ್ನು ನೋಡಲು ಎರಡು ಕಣ್ಣು ಸಾಲದು. ಇದು ಕಾಡಿನಿ೦ದ ಆವರಿಸಲ್ಪಟ್ಟಿದೆ. ಇಲ್ಲಿಯ ಸುತ್ತ ಮುತ್ತ ಹಳ್ಳಿಗಳ ಜನ ಅಡಿಕೆ ಬೆಳೆಗಾರರು. ತೆ೦ಗು, ಭತ್ತ, ವೆನಿಲ್ಲಾ, ಕೋಕಾಗಳನ್ನೂ ಸಹ ಇಲ್ಲಿ ಬೆಳೆಯುತ್ತಾರೆ. ಸಿರ್ಸಿಯ ಮಾರಿಕಾಂಬಾ ದೇಗುಲವು ಬಹಳ ಪ್ರಸಿದ್ಧಿಯಾಗಿದೆ. ಸಹಸ್ರಲಿಂಗ ಸಿರ್ಸಿಯಿಂದ ೧೭ ಕಿ.ಮಿ. ದೂರದಲ್ಲಿರುವ ಸಹಸ್ರಲಿಂಗದಲ್ಲಿ, ನದಿಯ ಮಧ್ಯದಲ್ಲಿ ಕಲ್ಲುಗಳಲ್ಲಿ ಕೆತ್ತಲಾದ ನೂರಾರು ಶಿವಲಿಂಗಗಳಿವೆ. ಕಾಡಿನ ಮಧ್ಯ ಇರುವ ಸಹಸ್ರಲಿಂಗಕ್ಕೆ ಶಿವರಾತ್ರಿಯಂದು ಬಹಳ ಜನ ಬರುತ್ತಾರೆ. ಸೊಂದಾ ಸಿರ್ಸಿಯಿಂದ ೧೫ ಕಿ.ಮಿ. ದೂರದಲ್ಲಿರುವ ಸೊಂದಾದಲ್ಲಿ ಪ್ರಸಿದ್ಧ ವಾದಿರಾಜ ಮಠವಿದೆ. ಉಂಚಳ್ಳಿ ಜಲಪಾತ ೧೧೬ ಮಿಟರ್ ಎತ್ತರದಿಂದ ಧುಮುಕುವ ಈ ಜಲಪಾತ ರಮಣೀಯವಾಗಿದೆ. ಸಿರ್ಸಿಯಿಂದ ೩೦ ಕಿ.ಮಿ. ದೂರದಲ್ಲಿರುವ ಈ ಜಲಪಾತದಲ್ಲಿ ವರ್ಷದ ಬಹು ಭಾಗದಲ್ಲಿ ನೀರು ಇರುತ್ತದೆ. ಯಾಣ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲೊಂದು. ಪಶ್ಚಿಮ ಘಟ್ಟಗಳ ಸಹ್ಯಾದ್ರಿ ಷ್ರೇಣಿಯಲ್ಲಿದೆ. ಇದು ಸಿರ್ಸಿ ಇಂದ ೪೫ ಕಿ.ಮಿ. ದೂರದಲ್ಲಿದೆ. ಜನಸಂಖ್ಯೆ೨೦೧೧ ಜನಗಣತಿಯ ಪ್ರಕಾರ ಈ ಊರಿನ ಜನಸಂಖ್ಯೆ ೧,೧೦,೨೧೫. ಇವರಲ್ಲಿ ೭೯ ಶೇಕಡಾ ಜನರು ವಿದ್ಯಾವಂತರು. ಇವರು ಕನ್ನಡ (ಹವ್ಯಕ ಕನ್ನಡ), ಕೊಂಕಣಿ, ಉರ್ದು, ಮರಾಠಿ ಮಾತಾಡುತ್ತಾರೆ. ಇಲ್ಲಿಯ ಜನ ಬಹಳ ಸೌಹಾರ್ದಶೀಲರು.ಇಲ್ಲಿಯ ಜನರ ಮುಖ್ಯ ವ್ಯಾವಹಾರಿಕ ಭಾಷೇ ಕೊ೦ಕಣಿ ಮತ್ತು ಕನ್ನಡ. ಅಪ್ಸರಕೊಂಡ : ಆಪ್ಸರ ಕೊಂಡ ಇದು ಹೊನ್ನಾವರ ತಾಲೂಕಿನ ಕಾಸರಕೋಡದಲ್ಲಿದೆ. ಹೊನ್ನಾವರದಿಂದ ಸುಮಾರು ೭ ಕೀ.ಮೀ. ದೂರದಲ್ಲಿರುವ ಈ ಪ್ರದೇಶ ಪ್ರವಾಸಿಗರಿಗರನ್ನು ಆಕರ್ಷಿಸುತ್ತದೆ. ಅರಬ್ಬಿ ಸಮುದ್ರದ ತಟದಿಂದ ೫೦೦ ಮೀ ಪೊರ್ವಕ್ಕಿರುವ ಈ ಪ್ರದೇಶದಲ್ಲಿ ಸುಮಾರು ೫೦ ಅಡಿಯಿಂದ ಧುಮುಕುವ ಸಣ್ಣದಾದ ಮನಮೋಹಕ ಜಲಪಾತ ಪ್ರವಾಸಿಗರಿಗೆ ಮುದ ನೀಡುತ್ತದೆ. ಪುರಾತನ ಕಾಲದಲ್ಲಿ ಇಲ್ಲಿ ಅಪ್ಸರೆಯರು ಸ್ನಾನ ಮಾಡಿರುವರೆಂಬ ಪ್ರತೀತಿ. ಅದರಿಂದ ಈ ಪ್ರದೇಶಕ್ಕೆ ಅಪ್ಸರಕೊಂಡ ಎಂದು ಹೆಸರು ಬಂದಿದೆ. ಇಲ್ಲಿನ ಸಮುದ್ರ ತೀರದಲ್ಲಿ ಸೂರ್ಯಾಸ್ತ ನೋಡುವದೆ ಒಂದು ವಿಶೇಷ ಅನುಭವ. ಬನವಾಸಿ ಮಧುಕೇಶ್ವರ ದೇವಾಲಯ : ಬನವಾಸಿ ಪಟ್ಟಣವು ವರದಾ ನದಿಯ ಎಡದಂಡೆಯ ಮೇಲಿರುವ ಪಟ್ಟಣ. ಇದು ಉತ್ತರ ಕನ್ನಡ ಜಿಲ್ಲೆಯಲ್ಲಿಯ ಸಿರ್ಸಿ ತಾಲೂಕಿನಲ್ಲಿದೆ. ಬನವಾಸಿಯ ಅಕ್ಷಾಂಶ : ೧೪೦ ೩೨’ ೧೦’’ (ಉ) ಹಾಗು ರೇಖಾಂಶ : ೭೫೦ ೦೦’ ೫೮”(ಪಶ್ಚಿಮ) . ಸಮುದ್ರ ಮಟ್ಟದಿಂದ ಎತ್ತರ : ೫೭೦.೮೯ ಮೀಟರುಗಳು. ಬನವಾಸಿಯು ಸಿರ್ಸಿಯಿಂದ ಸೊರಬಕ್ಕೆ ಹೋಗುವ ದಾರಿಯಲ್ಲಿ ಸುಮಾರು ೩೦ ಕಿ.ಮಿ.ಅಂತರದಲ್ಲಿದೆ. ಪೌರಾಣಿಕಪುರಾಣ ಕಾಲದಲ್ಲಿ ವೈಜಯಂತಿ ಎಂದು ಹೆಸರಾದ ಈ ನಗರದಲ್ಲಿ ಮಧು ಹಾಗು ಕೈಟಭ ಎಂಬ ದೈತ್ಯರನ್ನು ಮಹಾವಿಷ್ಣುವು ಸಂಹರಿಸಿದನಂತೆ. ಶಿವಭಕ್ತರಾದ ಈ ದೈತ್ಯರ ಹೆಸರಿನಲ್ಲಿ ಬನವಾಸಿಯಲ್ಲಿ ಮಧುಕೇಶ್ವರ ಹಾಗು ವರದಾ ನದಿಯ ಇನ್ನೊಂದು ದಡದಲ್ಲಿರುವ ಆನವಟ್ಟಿಯಲ್ಲಿ ಕೈಟಭೇಶ್ವರ ದೇವಾಲಯಗಳು ಅನಂತರದಲ್ಲಿ ನಿರ್ಮಾಣವಾದವು. ಧರ್ಮರಾಜನ ಅಶ್ವಮೇಧಯಾಗದ ಸಂದರ್ಭದಲ್ಲಿ ಸಹದೇವನು ದಕ್ಷಿಣ ಭಾರತದ ದಿಗ್ವಿಜಯ ಸಮಯದಲ್ಲಿ ವನವಾಸಿಕಾ ಎಂದರೆ ಬನವಾಸಿ ನಗರವನ್ನು ಗೆದ್ದನೆಂದು ಮಹಾಭಾರತದಲ್ಲಿ ಉಲ್ಲೇಖವಿದೆ. ಕದಂಬ ರಾಜ್ಯವನ್ನು ಕರ್ನಾಟಕದ ಪ್ರಥಮ ರಾಜ್ಯವೆಂದು ವರ್ಣಿಸಲಾಗುತ್ತಿದೆ. ಈ ರಾಜ್ಯದ ಸ್ಥಾಪಕ ಮಯೂರವರ್ಮ ( ಕ್ರಿ.ಶ. ೩೨೫-೩೪೫). ಈತನ ರಾಜಧಾನಿ ಬನವಾಸಿ. ಬೌದ್ಧ ಧರ್ಮ ಪ್ರಸಾರಕ್ಕಾಗಿ ಅಶೋಕ ಚಕ್ರವರ್ತಿ ಕಳುಹಿಸಿದ ಬೌದ್ಧ ಭಿಕ್ಷು ರಖ್ಖಿತನು ಬನವಾಸಿ ಪ್ರಾಂತಕ್ಕೆ ಬಂದಿದ್ದನೆಂದು ಮಹಾವಂಶ ಎಂಬ ಬೌದ್ಧಗ್ರಂಥ ತಿಳಿಸುತ್ತಿದೆ. ನಾಗಾರ್ಜುನಕೊಂಡದ ಒಂದು ಶಾಸನದ ಪ್ರಕಾರ ಸಿಂಹಳದ ಬೌದ್ಧ ಭಿಕ್ಷುಗಳು ಧರ್ಮಪ್ರಸಾರಕ್ಕಾಗಿ ಬನವಾಸಿಗೆ ಬಂದಿದ್ದರಂತೆ. ಕ್ರಿ.ಶ. ೧ನೆಯ ಶತಮಾನದಲ್ಲಿ ಭಾರತಕ್ಕೆ ಬಂದಿದ್ದ ಗ್ರೀಕ್ ಪ್ರವಾಸಿ ಟಾಲೆಮಿ ಈ ಪಟ್ಟಣವನ್ನು “ಬನೌಸಿ” ಎಂದು ಕರೆದಿದ್ದಾನೆ. ಕನ್ನಡ ಸಾಹಿತ್ಯದಲ್ಲಿಕನ್ನಡದ ಆದಿಕವಿ ಪಂಪ ತನ್ನ ಕಾವ್ಯ ವಿಕ್ರಮಾರ್ಜುನ ವಿಜಯದಲ್ಲಿ ಬನವಾಸಿಯನ್ನು ವರ್ಣಿಸುತ್ತ “ ಆರಂಕುಶವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಮಂ ” ಎಂದು ಹೇಳಿದ್ದಾನೆ. ಕವಿ ಚಾಮರಸ ಬರೆದ ಪ್ರಭುಲಿಂಗಲೀಲೆ ಕಾವ್ಯದ ರಂಗಸ್ಥಳವೇ ಬನವಾಸಿ. ಪ್ರೇಕ್ಷಣೀಯ ಮಧುಕೇಶ್ವರ ದೇವಾಲಯಮಧುಕೇಶ್ವರ ದೇವಾಲಯವೇ ಬನವಾಸಿಯ ಅತ್ಯಂತ ಪ್ರೇಕ್ಷಣೀಯ ಹಾಗು ಐತಿಹಾಸಿಕ ಸ್ಥಳವಾಗಿದೆ. ಇದಲ್ಲದೆ ಸ್ವಾದಿ ಅರಸರು ಕಟ್ಟಿಸಿದ ಶಿಲಾಮಂಟಪ ವೈಶಿಷ್ಟ್ಯಪೂರ್ಣವಾಗಿದೆ. ಇಲ್ಲಿ ಉಮಾ ದೇವಿ, ಶಾಂತಲಕ್ಶ್ಮಿ ನರಸಿಂಹ ಅಲ್ಲದೆ ಇನ್ನೂ ಹಲವು ದೇವತೆಗಳ ಮೂರ್ತಿಗಳು ಕಾಣಸಿಗುವುದು. ದೇವಾಲಯದ ಗರ್ಭಗುಡಿಯ ಬಾಗಿಲಲ್ಲಿ ಪುರುಷಾಮೃಗವನ್ನು ಅಧ್ಭುತವಾಗಿ ಕೆತ್ತಲಾಗಿದೆ. ಬನವಾಸಿಯ ಕೋಟೆ ಬಹಳ ಪುರಾತನವಾದದ್ದು. ಚಾಲುಕ್ಯ ಇಮ್ಮಡಿ ಪುಲಕೇಶಿಯ ಐಹೊಳೆ ಶಾಸನದಲ್ಲಿ ಈ ಕೋಟೆಯ ಪ್ರಸ್ತಾಪವಿದೆ. ಸುಮಾರು ಕ್ರಿ.ಶ ೧೦೦೦ ವರ್ಷದ ಕಾಲಕ್ಕೆ ಸೇರಿದ್ದಿರಬಹುದಾದ, ಚಂದ್ರವಳ್ಳಿಯಲ್ಲಿ ದೊರೆತಿರುವ ಇಟ್ಟಿಗೆಗಳಂತಹ ದೊಡ್ಡ ಚಪ್ಪಟ್ಟೆ ಇಟ್ಟಿಗೆಗಳನ್ನು ಈ ಕೋಟೆಯ ಗೋಡೆಯ ಅತೀ ಕೆಳಗಿನ ವರಸೆಗಳಲ್ಲಿ ಕಾಣಬಹುದು. ಇಟ್ಟಿಗೆಯ ಗೋಡೆಯ ಮೇಲೆ ಜಂಬಿಟ್ಟಿಗೆಯ ದಪ್ಪ ಗೋಡೆಯನ್ನು ಕಟ್ಟಲಾಗಿದೆ. ಇದು ವಿಜಯನಗರದ ಕಾಲದಲ್ಲಿ ಕಟ್ಟಲಾದದ್ದು ಎನ್ನಲಾಗಿದೆ. ಕದಂಬೋತ್ಸವಪ್ರತಿ ವರ್ಷವೂ ಕರ್ನಾಟಕ ಸರಕಾರ ಬನವಾಸಿಯಲ್ಲಿ ಕದಂಬೋತ್ಸವವನ್ನು ಆಚರಿಸುತ್ತದೆ. ಈ ಸಮಯದಲ್ಲಿ ಸಾಹಿತ್ಯ, ಸಂಗೀತ, ನೃತ್ಯ ಮೊದಲಾದ ಕಾರ್ಯಕ್ರಮಗಳು ಇಲ್ಲಿ ನಡೆಯುತ್ತವೆ. ಬನವಾಸಿಯಲ್ಲಿ ಒಂದು ಚಿಕ್ಕ ಸರಕಾರಿ ಪ್ರವಾಸಿ ಬಂಗಲೆ ಇದ್ದು, ಕಾರ್ಯನಿರ್ವಾಹಕ ಇಂಜನಿಯರರು, ಸಿರ್ಸಿ ವಿಭಾಗ, ಲೋಕೋಪಯೋಗಿ ಇಲಾಖೆ,ಸಿರ್ಸಿ ಇವರ ಮುಖಾಂತರ ವಸತಿ ಕಾಯ್ದಿರಿಸಬಹುದು. ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದಲ್ಲಿ ಸಾಹಿತ್ಯ ಸಾಧಕರಿಗೆ ಪಂಪ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುತ್ತದೆ. ಮಾಗೋಡು ಜಲಪಾತ : ಮಾಗೋಡು ಜಲಪಾತ ಯಲ್ಲಾಪುರದಿಂದ ೨೦ ಕಿಲೋಮೀಟರ್ ದೂರದಲ್ಲಿದೆ. ಬೇಡ್ತಿ ನದಿಯು ಸುಮಾರು ೨೦೦ ಮೀಟರ್ ಎತ್ತರದಿಂದ ಎರಡು ಘಟ್ಟಗಳಲ್ಲಿ ಧುಮುಕುತ್ತದೆ. ಈ ಜಲಪಾತದ ಮೂಲ ಬೇಡ್ತಿ ನದಿ.ಮಳೆಗಾಲದುದ್ಡಕ್ಕೂ ಹಸಿರು ಕಾವ್ಯ ಮೈದಳೆಯುತ್ತದೆ.ಯಲ್ಲಾಪುರದಿಂದ ೨೦ ಕಿ.ಮೀ ದೂರ.ಜಲಪಾತದ ಬಳಿಯವರೆಗೂ ವಾಹನವನ್ನು ಒಯ್ಯಬಹುದು.ತಂಗುವ ವಿಚಾರವಿದ್ದರೆ ಮತ್ತೆ ಯಲ್ಲಾಪುರ ಪಟ್ಟಣಕ್ಕೆ ಬರಬೇಕು.ಈ ಮಾರ್ಗವಾಗಿ ಬಂದ್ರೆ,೬೦ ಎಕರೆ ವಿಸ್ತೀರ್ಣದ ಅದ್ಭುತ ಕವಡೆಕೆರೆ,ಪ್ರಸಿದ್ಡ ಚಂದಗುಳಿ ವಿನಾಯಕ ದೇವಸ್ತಾನ,ಬೇಡ್ತಿ ಯೊಜನೆಯ ನೋವನ್ನು ಬಿಂಬಿಸುವ ರೆಡ್ಡಿ ಕೆರೆ,ಕುಳಿಮಾಗೋಡು ಜಲಪಾತ,ಜೇನುಕಲ್ಲು ಗುಡ್ಡ.... ಹೀಗೆ ಹತ್ತಾರು ಜಾಗಗಳಿಗೂ ಭೇಟಿ ನೀಡಬಹುದು. ಉಂಚಳ್ಳಿ ಜಲಪಾತ : ಉಂಚಳ್ಳಿ ಜಲಪಾತ ಅಥವಾ ಲುಷಿಂಗ್ಟನ್ ಜಲಪಾತ ಅಘನನಾಶಿನಿ ನದಿಯಿಂದ ಸೃಷ್ಟಿಯಾಗುವ ಜಲಪಾತ. ಇದರ ಎತ್ತರ ಸುಮಾರು ೧೧೬ ಮೀಟರ್. ಈ ಜಲಪಾತವು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಸಿರ್ಸಿಯಿಂದ ೩೦ ಕಿಮಿ ದೂರದಲ್ಲಿದೆ. ೧೮೪೫ರಲ್ಲಿ ಈ ಜಲಪಾತವನ್ನು ಪತ್ತೆಹಚ್ಚಿದ ಬ್ರಿಟಿಷ್ ಅಧಿಕಾರಿ ಜೆ.ಡಿ. ಲುಷಿಂಗ್ಟನ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಈ ಜಲಪಾತವು ನೀರು ಬೀಳುವಾಗ ಮಾಡುವ ಶಬ್ದದಿಂದ, ಸ್ಥಳೀಯರು ಇದನ್ನು ಕೆಪ್ಪ ಜೋಗ ಎಂದೂ ಕೂಡ ಕರೆಯುತ್ತಾರೆ. ಯಾಣ : ಯಾಣ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲೊಂದು. ಪಶ್ಚಿಮ ಘಟ್ಟಗಳ ಸಹ್ಯಾದ್ರಿ ಷ್ರೇಣಿಯಲ್ಲಿದೆ. ಇದು ಸಿರ್ಸಿ ಇಂದ ೪೫ ಕಿ.ಮಿ. ದೂರದಲ್ಲಿದೆ." ರೊಕ್ಕಿದ್ದರೇ ಗೋಕರ್ಣ ಸೊಕ್ಕಿದ್ದರೆ ಯಾಣ” ಎಂಬ ಮಾತು ಚಾಲ್ತಿಯಲ್ಲಿದೆ.ಏಕೆಂದರೆ ಯಾಣಕ್ಕೆ ಯಾತ್ರೆ ಕೈಕೊಳ್ಳುವದು ಹಿಂದೆ ಅಷ್ಟೊಂದು ಸಾಹಸದ ಮಾತೇ ಆಗಿತ್ತು. ಇಂದು ಯಾಣದ ಹತ್ತಿರದವರೆಗೂ ಬಸ್ಸಿನ ರಸ್ತೆಯಾಗಿದೆ. ಕೇವಲ ಒಂದು ಕಿಲೋಮೀಟರ ದೂರವನ್ನಷ್ಟೇ ನಡೆಯಬೇಕಾಗುವದು. ಕುಮಟೆಯಿಂದ ಹರೀಟಾ ಬಳಿಯ ಮಾರ್ಗದಿಂದ ಅಂಕೋಲೆಯ ಬದಿಯಿಂದ ಅಚವೆ ಮಾರ್ಗವಾಗಿ ಸಿರ್ಸಿಯಿಂದ ಹೆಗಡೆಕಟ್ಟೆ ಮಾರ್ಗವಾಗಿ ಕಾಡಿನಲ್ಲಿ ಹಾದು ಯಾಣವನ್ನು ತಲುಪಬೇಕು. ವಡ್ಡಿ, ಮತ್ತಿ, ದೇವಿಮನೆ ಘಟ್ಟಗಳು ಸುತ್ತುವರಿಯಲ್ಪಟ್ಟದ್ದರಿಂದ ಯಾವ ದಾರಿಯಲ್ಲಿ ಬಂದರೂ ದುರ್ಗಮ ಬೆಟ್ಟದ ದಾರಿ ತಪ್ಪಿದ್ದಲ್ಲ. ಯಾಣದ ಶಿಖರ (ದೇವಾಲಯ) ವೆಂದು ಕರೆಯಲ್ಪಡುವ ಹಿರಿಬಂಡೆ ೧೨೦ ಮೀಟರ ಎತ್ತರವಾದ ಸುಮಾರು ಅಷ್ಟೇ ಅಗಲವಾದ ನೆಲಮುಗಿಲನ್ನು ಜೋಡಿಸುವ ಕರೆ ಪರದೆಯಂತೆ ಬೃಹದಾಕಾರದ ಭಯಂಕರವಾದ ಶಿಲಾ ರೂಪವಾಗಿದೆ. ಇದನ್ನು ಮೊದಲೊಮ್ಮೆ ಕಂಡಾಗ ಎಂಥವನಾದರು ನಿಬ್ಬೆರಗಾಗಿ ಪ್ರಕೃತಿ ಮಹಾಕೃತಿಗೆ ತಲೆ ಮಣಿಯಲೇ ಬೇಕು. ಈ ಬಂಡೆಯ ಮಧ್ಯದಲ್ಲಿ ಸೀಳು ಇದ್ದು ನೆತ್ತಿಯ ಮೇಲೆ ಜಲ ಸಂಚಯವಿದೆ! ಈ ಭೀಮ ಬಂಡೆಯ ಸೀಳಿನ ಗುಹೆಯಲ್ಲಿ ತಾನಾಗಿ ಮೂಡಿನಿಂತ ಭೈರವೇಶ್ವಲಿಂಗ ಎರಡು ಮೀಟರ ಎತ್ತರವಾಗಿದ್ದು ಈ ಲಿಂಗದ ಮೇಲೆ ಸದಾ ಅಂಗುಲ ಗಾತ್ರದ ನೀರು ಮೇಲಿನಿಂದ ಒಸರುತ್ತಿರುತ್ತದೆ! ಸ್ಕಂದಪುರಾಣದಲ್ಲಿ ಯಾಣದ ಕತೆ ನಿರೂಪಿತವಾಗಿದೆ. ಭಸ್ಮಾಸುರನು ಈಶ್ವರನಿಂದ ಉರಿಹಸ್ತದ ವರ ಪಡೆದು ಕೊನೆಗೆ ಈಶ್ವರನನ್ನೇ ಸುಡುವದಾಗಿ ಅಟ್ಟಿಸಿಕೊಂಡು ನಡೆದಾಗ ಭೈರವೇಶ್ವರನ ರಕ್ಷಣೆಗಾಗಿ ಮಹಾವಿಷ್ಣುವು ಮೋಹಿನಿಯಾಗಿ ಬಂದು ಭಸ್ಮಾಸುರನನ್ನು ಒಲಿಸಿ ಕುಣಿಸಿ ಅವನ ಹಸ್ತವನ್ನೆ ಅವನ ತಲೆಮೇಲಿರಿಸುವಂತೆ ಮಾಡಿ ಭಸ್ಮಾಸುರನನ್ನು ಭಸ್ಮ ಮಾಡಿದ ಸ್ಥಳವಿದೆಂದು ಪ್ರತೀತಿ. ಸುತ್ತಲಿನ ಅರಣ್ಯ ಪ್ರದೇಶವೆಲ್ಲ ಕಪ್ಪಾದ ಭಸ್ಮಮಯ ಮಣ್ಣಿನಿಂದ ತುಂಬಿರುವದರಿಂದ ಈ ಹೇಳಿಕೆಗೊಂದು ಪುಷ್ಠಿಯೊದಗಿದೆ. ಯಾಣದ ಬಂಡೆಯ ಮೇಲೆಲ್ಲ ಸಾವಿರಾರು ಹಿರಿಜೇನು ಹುಟ್ಟುಗಳು ಕಂಗೊಳಿಸುತ್ತವೆ. ಈ ಹೆಬ್ಬಂಡೆಯಿಂದ ಇಳಿದು ಬಂದ ಪ್ರವಾಹವೆ ಮುಂದೆ ಚಂಡಿಕಾ ನದಿಯಾಗಿ ಅಘನಾಶಿನಿ ನದಿಯನ್ನು ಸೇರುತ್ತದೆ. ಈ ಬಂಡೆಯಿದ್ದ ಬೆಟ್ಟದ ಕೆಳಗಡೆ ನದಿಯಲ್ಲಿ ಸ್ನಾನಮಾಡಿ ಮೇಲೇರಿ ಹೋಗುವಾಗ ಇನ್ನೊಂದು ಕಿರಿಗಾತ್ರದ “ಹೊಲತಿ ಶಿಖರ” (ಮೋಹಿನಿ ಶಿಖರ) ಕಂಗೊಳಿಸುತ್ತದೆ. ಇಂಥ ಹಲವಾರು ಮಹಾಮಹಾ ಬಂಡೆಗಳು ಯಾಣದ ಪರಿಸರದಲ್ಲಿವೆ. ಪ್ರಕೃತಿಯ ಭವ್ಯತೆಯ ದಿವ್ಯದರ್ಶನದಿಂದ ಪುನೀತನಾದ ಪ್ರವಾಸಿಗೆ ಪ್ರವಾಸದ ಪ್ರಯಾಸದ ಅರಿವಾಗುವದಿಲ್ಲ. ಪೂರ್ವಕಾಲದಲ್ಲಿ ಯಾಣದ ಪ್ರದೇಶ ಸಮೃದ್ಧ ಪ್ರದೇಶವಾಗಿದ್ದು “ಯಾಣದ ಎಪ್ಪತ್ತು ಹಳ್ಳಿ” ತುಂಬಾ ಪ್ರಖ್ಯಾತವಾಗಿತ್ತು. ಶಿವರಾತ್ರಿಯ ದಿನ ಇಲ್ಲಿ ಪೂಜೆ ಸಲ್ಲಿಸಿ ದಂಡಿತೀರ್ಥದ ನೀರನ್ನು ತಂದು ಗೋಕರ್ಣದ ಮಹಾಬಲೇಶ್ವರನಿಗೆ ಅರ್ಪಿಸಿದರೆ ಮಹಾಪುಣ್ಯವಂತೆ. ಕೌಶಿಕ ರಾಮಾಯಣ ಬರೆದ ಬತ್ತಲೇಶ್ವರ ಕವಿ ಇಲ್ಲಿ ವಾಸಿಸಿದ್ದನಂತೆ.ಪ್ರವಾಸದ ಕಾಲದಲ್ಲಿ ಎತ್ತರ ಗಿಡಗಳ ದಟ್ಟ ವಿಸ್ತಾರ ಕಾಡು ತನುಮನದ ಆಯಾಸವನ್ನೆಲ್ಲ ಮರೆಸುತ್ತದೆ."ನಮನ ಮುರುಡೇಶ್ವರ ಸಮುದ್ರತೀರ, ದೇವಾಲಯ : ಮುರುಡೇಶ್ವರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿದೆ. ಇಲ್ಲಿರುವ ಮುರುಡೇಶ್ವರ ಸ್ವಾಮಿಯ ದೇವಸ್ಥಾನವು ಧಾರ್ಮಿಕ ಪುಣ್ಯ ಸ್ಠಳವಗಿದ್ದು, ಐತಿಹಾಸಿಕವಗಿ ಪ್ರಖ್ಯಾತಿಯನ್ನು ಹೊಂದಿದೆ. ಅರೇಬಿಯನ್ ಸಮುದ್ರದ ತೀರದಲ್ಲಿರುವ ಈ ಊರು, ಪ್ರಪಂಚದ ಅತ್ಯಂತ ಎತ್ತರದ ಶಿವನ ವಿಗ್ರಹಕ್ಕೆ ಹೆಸರಿವಾಸಿಯಾಗಿದೆ. ಮುರುಡೆಶ್ವರ ಕೆವಲ ಧಾಮಿಱಕ ಕ್ಷೇತ್ರ ಮಾತ್ರ ಻ಲ್ಲ. ಜಗತ್ತಿನ ೊಂದು ಪ್ರಖ್ಯಾತ ಪ್ರವಾಸಿ ತಾಣ ಮುರುಡೇಶ್ವರ ಕನಾಱಟಕದ ಕರಾವಳಿ ಜಿಲ್ಲೆಯಾದ ುತ್ತರ ಕನ್ನಡದ ಭಟ್ಕಳ ತಾಲೂಕಿನ ೊಂದು ಪುಣ್ಯ ಕ್ಷೇತ್ರ. ಹಿಂದೆ ಈ ಕ್ಷೇತ್ರ ಹೆಚ್ಚು ಜನಪ್ರೀಯ ವಾಗಿರಲಿಲ್ಲಾ ಆದರೆ ಇದನ್ನು ಜಾಗತಿಕ ಮಟ್ಟದಲ್ಇ ನಿಲ್ಲಿಸಿದ ಶ್ರೇಯಸ್ಸು ಸನ್ಮಾನ್ಯರಾದ ಶ್ರೀ ಆರ.ಎನ್.ಶೆಟ್ಟಿಯವರಿಗೆ ಸಲ್ಲುತ್ತದೆ. ಮುರುಡೇಶ್ವರದಲ್ಲಿ ಶಿವನ ಲಿಂಗವಿದ್ದು. ಜೊತೆಗೆ ೆಷ್ಯಾದಲ್ಲಿಯೆ ೨ನೇ ಎತ್ತರದ ಶಿವನ ಪ್ರತಿಮೆ ಇದೆ. ಮತ್ತು ಜಗತ್ತಿನಲ್ಲಿಯೇ ಅತಿ ಎತ್ತರವಾದ ರಾಜಗೋಪುರವಿದೆ. ಇದು ಧಾಮಿಱಕ ಾಸಕ್ತರನ್ನು ಮಾತ್ರ ತನ್ನತ್ತ ಸೆಲೆಯದೆ ವಿಹಾರಿಗಳನ್ನು ಆಕಷಿ್ಸುತ್ತಿದೆ. ಇತ್ತಿಚೆಗೆ ಇಲ್ಲಿ ರಾಮ,ಲಕ್ಷ್ಮಣ ಮತ್ತು ಸೀತಾ ಪ್ರತಿಮೆ ಮತ್ತು ಶನಿ ದೇವಾಲಯವನ್ನು ಮಾಡಲಾಗಿದೆ. ಇಲ್ಲಿ ಸಮುದ್ದರದಲ್ಲಿ ಜಲಕೀಡೆ ಆಡುವುದೆ ಒಂದು ಅನನ್ಯ ಻ನುಭವ. ಪುರಾಣದ ಕತೆ : ಗೋಕರ್ಣದ ಆತ್ಮಲಿಂಗ ಸ್ಥಾಪನೆಯಾದಾಗಲೇ ರಾವಣನಿಂದಲೆ ಇನ್ನು ನಾಲ್ಕು ಲಿಂಗಗಳು ಈ ಜಿಲ್ಲೆಯಲ್ಲಿ ಸ್ಥಾಪಿಸಲ್ಪಟ್ಟವು ಎಂಬುದು ಪುರಾಣದ ಕತೆ. ಇನ್ನಿತರ ನಾಲ್ಕು ಕ್ಷೇತ್ರಗಳೆಂದರೆ ಮುರುಡೇಶ್ವರ, ಗುಣವಂತೇಶ್ವರ, ಧಾರೇಶ್ವರ ಮತ್ತು ಸಜ್ಜೇಶ್ವರ. ಮುರ್ಡೇಶ್ವರವು ಕಡಲದಂಡೆಯಲ್ಲಿದ್ದು ಪ್ರಾಚೀನಕಾಲದಿಂದಲೂ ಧಾರ್ಮಿಕತೆ ಹಾಗೂ ಐತಿಹಾಸಿಕತೆಗಳ ಪ್ರಸಿದ್ಧ ತಾಣವಾಗಿತ್ತು. ಅಂತೆಯೆ ಇಂದಿಗೂ ಅಲ್ಲ ಹಾಡುವಳ್ಳಿಯ ಸಾಳ್ವ ದೊರೆಗಳು ನಿರ್ಮಿಸಿದ ಬಸದಿ, ತೀರ್ಥಂಕರರ ಮೂರ್ತಿಗಳು, ಹಲವು ದೇವಾಲಯಗಳು, ಕೆರೆ, ವೀರರಮನೆ, ವೀರಗಲ್ಲುಗಳು, ಮರದಿಂದ ತಯಾರಿಸಿದ ೧೬ ಮಾಸತಿಯರ ಕುರುಹುಗಳು ಇವೆಲ್ಲಕ್ಕೂ ಕಿರೀಟವಿಟ್ಟಂತೆ ಸುಂದರ ನೆಲೆಯಲ್ಲಿ ಶೋಭಿಸುತ್ತಿರುವ ಮುರುಡೇಶ್ವರ ದೇವಾಲಯ ಹಾಗೂ ಹಳೆಯ ದೇವಾಲಯಗಳ ಅವಶೇಷಗಳನ್ನೆಲ್ಲ ಕಾಣಬಹುದು. ರಾಷ್ಟ್ರೀಯ ಹೆದ್ದಾರಿಯಿಂದ ಊರನ್ನು ಪ್ರವೇಶಿಸುವಾಗ ಮಹಾದ್ವಾರವು ಕಲಾತ್ಮಕವಾಗಿದ್ದು ದೇವಾಲಯದ ಬಳಿಸಾರಿದಂತೆ ಎರಡು ಆನೆಗಳು ಪ್ರವಾಸಿಕರನ್ನು ಸ್ವಾಗತಿಸುವವು. ಸಮುದ್ರದಲ್ಲಿ ಒಳಸೇರಿದ ಕಂದುಗಿರಿ ಎಂಬ ಗುಡ್ಡದ ಮೇಲೆ ಮುರುಡೇಶ್ವರನ ದೇವಾಲಯವನ್ನು ಹೊಸದಾಗಿ ದಾಕ್ಷಿಣಾತ್ಯ ಶಿಲ್ಪದಲ್ಲಿ ನಿರ್ಮಿಸಲಾಗಿದೆ. ಸುತ್ತಲೂ ವಿಸ್ತಾರವಾದ ಚಂದ್ರಶಾಲೆಯಿದ್ದು ಗಣಪತಿ, ಸುಬ್ರಹ್ಮಣ್ಯ, ಹನುಮಂತ, ಪಾರ್ವತಿಯರ ಪೀಠಗಳಿವೆ. ಮುರ್ಡೇಶ್ವರ ದೇವಾಲಯದ ಗೋಪುರ ಹಾಗು ಸುತ್ತಲಿನ ಕಟ್ಟಡಗಳ ಶಿಲ್ಪಗಳು ಉತ್ತಮ ಮಟ್ಟದ್ದಾಗಿದ್ದು ಆಕರ್ಷಕವಾಗಿದೆ. ಸುತ್ತಲಿನ ಸಮುದ್ರ ನಾಡಿನ ಪ್ರವಾಸಿಗಳನ್ನು ತನ್ನಡೆಗೆ ಸೆಳೆಯುತ್ತದೆ. ನೇತ್ರಾಣಿ ದ್ವೀಪ ಹತ್ತಿರವೆ ಇದೆ. ಇಲ್ಲಿಯ ಕಡಲ ಸಂಜೆಯ ಸೊಗಸನ್ನು ಅನುಭವಿಸಿಯೇ ತಿಳಿಯಬೇಕು. ಪ್ರವಾಸಿಗಳಿಗಾಗಿ ಸಮುದ್ರಮಧ್ಯದಲ್ಲಿ ಕಟ್ಟಲಾದ ನವೀನ ಉಪಹಾರ ಗೃಹ, ಗುಡ್ಡದ ಮೇಲಿರುವ ವಸತಿಗೃಹಗಳು, ರಮ್ಯವಾಗಿದೆ. ಪ್ರತಿನಿತ್ಯ ಉಚಿತ ಅನ್ನದಾನಸೇವೆ ದೇವಾಲಯ ನಡೆಸುತ್ತಿದೆ. ತಿರುಪತಿಯನ್ನು ಬಿಟ್ಟರೆ ಇನ್ನೆಲ್ಲೂ ಈ ವರೆಗೆ ಇಲ್ಲದ ೩೫ ಅಡಿ ಎತ್ತರದ ಚಿನ್ನದ ವರ್ಣದ ಭವ್ಯ ಧ್ವಜಸ್ಥಂಬ ಈ ಮಾದರಿಯದ್ದು ಕರ್ನಾಟಕದಲ್ಲಿಯೆ ಅತಿ ಎತ್ತರವಾಗಿದ್ದು ಮನಸೆಳೆಯುತ್ತದೆ. ಇಂದು ರಾಷ್ಟ್ರಖ್ಯಾತಿಯ ಸ್ಥಳವಾಗಿ ಪರಿಗಣಿಸಲ್ಪಟ್ಟ ಮುರ್ಡೇಶ್ವರದ ನಿಸರ್ಗದ ಹಾಗು ಕಲೆಯ ವೈಭವವನ್ನು ಕಂಡೇ ಆನಂದಿಸಬೇಕು,."ನಮನ" ಗೋಕರ್ಣ ಸಮುದ್ರತೀರ, ದೇವಾಲಯ : ಗೋಕರ್ಣ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಡಲತೀರದ ಒಂದು ಊರು. ಭೂಕೈಲಾಸ; ಪರಶುರಾಮ ಭೂಮಿ ಎಂಬ ಐತಿಹ್ಯಗಳನ್ನು ಹೊಂದಿರುವ ಈ ಪ್ರದೇಶ ವಾಯವ್ಯ ದಿಕ್ಕಿನಲ್ಲಿದೆ. ಕಾರವಾರದಿಂದ ಸುಮಾರು ೬೫ ಕಿ.ಮಿ. ದೂರದಲ್ಲಿದೆ. ಮಹಾಗಣಪತಿ ದೇವಾಲಯ, ಶಿವ ದೇವಾಲಯಗಳು ಇದ್ದು ಗೋಕರ್ಣ ಒಂದು ಪವಿತ್ರ ಕ್ಷೇತ್ರವಾಗಿದೆ. ದೇವಾಲಯಗಳ ಸಮೀಪದಲ್ಲಿಯೇ ಸುಂದರ ಕಡಲ ತೀರಗಳಿದ್ದು ನೋಡಲು ತುಂಬಾ ಆಕಷ೯ಣೀಯವಾಗಿದೆ. ಇದೊಂದು ಪ್ರವಾಸಿಗರ ತಾಣವಾಗಿದ್ದು ದೇಶ-ವಿದೇಶಗಳಿಂದಲೂ ಪ್ರವಾಸಿಗರು ಬರುತ್ತಾರೆ.ಗೋಕರ್ಣದಲ್ಲಿ ೩ ಸಮುದ್ರ ತೀರಗಳಿದ್ದು ನೋಡಲು ತುಂಬಾ ರಮಣೀಯವಾಗಿದೆ. ಅರ್ಧಚಂದ್ರಾಕಾರದ ಸಮುದ್ರ ತೀರ ಸಮುದ್ರ ತೀರ ಆಕಾರದ ಸಮುದ್ರ ತೀರ ಕಾರವಾರ ಸಮುದ್ರತೀರ : ಕಾರವಾರ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಮತ್ತು ಜಿಲ್ಲಾ ಕೇಂದ್ರ. ಕಾರವಾರ, ಕರ್ನಾಟಕ ಹಾಗೂ ಗೋವೆಯ ಗಡಿಯಿಂದ ದಕ್ಷಿಣಕ್ಕೆ ಸುಮಾರು 15 ಕಿಲೋ ಮೀಟರ್ ದೂರದಲ್ಲಿದ್ದು, ಅರಬ್ಬೀ ಸಮುದ್ರದಂಚಿನಲ್ಲಿರುವ ನಗರವಾಗಿದೆ. ಕಾರವಾರವು ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಸುಮಾರು ೫೨೦ ಕಿ.ಮೀ. ವಾಯುವ್ಯ ದಿಕ್ಕಿನಲ್ಲಿದೆ. ಕಡಲ ಕಿನಾರೆಯಲ್ಲಿರುವ ಈ ನಗರವು ಪ್ರವಾಸಿಗರ ತಾಣವೂ ಹೌದು. ಇಲ್ಲಿನ ಕಡಲು ಹಾಗೂ ಸುತ್ತಲೂ ಇರುವ ಪುರಾಣ ಪ್ರಸಿದ್ಧ ಸ್ಥಳಗಳಾದ ಗೋಕರ್ಣ, ಮುರುಡೇಶ್ವರ ಹಾಗೂ ಹಲವಾರು ಚಿಕ್ಕ, ದೊಡ್ಡ ಪವಿತ್ರ ಸ್ಥಳಗಳು, ಹತ್ತಾರು ಸುಂದರ ಕಡಲ ಕಿನಾರೆಗಳು ಎಲ್ಲರನ್ನೂ ಕೈಬೀಸಿ ಕರೆಯುತ್ತದೆ. ಇಲ್ಲಿನ ಸುಂದರ ಹಾಗೂ ಪ್ರಶಾಂತ ವಾತಾವರಣ ರಷ್ಟ್ರಕವಿ ಶ್ರೀ ರವೀಂದ್ರ ನಾಥ್ ಠಾಕೂರ್ ರವರ ಮೊದಲ ಕೃತಿ ರಚನೆಗೆ ಸ್ಫೂರ್ತಿಯಾಯಿತು."ಕಡಲ ತೀರದ ಕಾಶ್ಮಿರ" ಕಾರವಾರ.ಅರಬ್ಬೀ ಸಮುದ್ರದ ಬಂದರಾಗಿ ಅಭಿವೃದ್ಧಿಪಡಿಸಲಾದ ಕಾರವಾರ ಕರ್ನಾಟಕದ ಎರಡನೆ ಪ್ರಮುಕ ಬಂದರು.ದೇಶದ ಅತೀ ದೊಡ್ಡ ನೌಕಾನೆಲೆ ಕಾರವಾರ.ಕರ್ನಾಟಕದ ಎಕೈಕ ಅಣು ವಿದ್ದುತ ಸ್ತಾವರ ಕೈಗಾ ಕಾರವಾರದ ಸನಿಹದಲ್ಲಿದೆ. ಕಾರವಾರವು ಪ್ರವಾಸಿಗಳಿಗೆ ಒಂದು ಸು೦ದರ ತಾಣ. ದಾಂಡೇಲಿ ಅಭಯಾರಣ್ಯ : ದಾಂಡೇಲಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಒಂದು ಕೈಗಾರಿಕೆ ಸಾಂದ್ರಿತ ಊರು. ಕಾಳಿ ನದಿಯ ದಡದಲ್ಲಿರುವ ಪುಟ್ಟ ಪಟ್ಟಣ ಎಂದೂ ಹೇಳಬಹುದು. ದಟ್ಟ ಅರಣ್ಯದ ಮಧ್ಯೆ ಹಲವು ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಿದ್ದರಿಂದಾಗಿ, ಉತ್ತರ ಭಾರತದ ಉದ್ಯಮಿಗಳು ಇಲ್ಲಿಗೆ ಬಂದು ಕಾಗದ ಕಾರ್ಖಾನೆ, ಕಬ್ಬಿಣದ ವಿವಿಧ ಉತ್ಪನ್ನಗಳು, ಮೆದು ಮರ ಕಾರ್ಖಾನೆಗಳನ್ನು ಸ್ಥಾಪಿಸಿದರು. ಜನ ಜೀವನ ಮತ್ತು ಭಾಷೆದಾಂಡೇಲಿಯು ಜನಜೀವನದ ದೃಷ್ಟಿಯಿಂದ ಒಂದು ಮಿಶ್ರ ಸಂಸ್ಕೃತಿಯ ದ್ವೀಪದಂತೆ ಎನ್ನಬಹುದು. ಉತ್ತರ ಭಾರತದ ಹಲವು ಕೆಲಸಗಾರರು ಇರುವುದರಿಂದಾಗಿ, ಹಿಂದಿಯೂ ಇಲ್ಲಿ ಒಂದು ಸಂಪರ್ಕಭಾಷೆ. ಇಲ್ಲಿ ಕನ್ನಡ,ಕೊಂಕಣಿ,ಹಿಂದಿ ಭಾಷೆಗಳು ಪ್ರಚಲಿತದಲ್ಲಿವೆ. ಸಂಪರ್ಕ- ಈ ಊರು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದರೂ, ಇಲ್ಲಿಗೆ ಹುಬ್ಬಳ್ಳಿಯು ಹತ್ತಿರದ ಪಟ್ಟಣ. ಹುಬ್ಬಳ್ಳಿಯಿಂದ ನೇರ ಬಸ್ ಸಂಪರ್ಕ ಸುಲಲಿತವಾಗಿದೆ. ಅತ್ತ ರಾಮನಗರದ ಮೂಲಕ ಗೋವಾದ ಕಡೆಗೂ ರಸ್ತೆ ಸಂಪರ್ಕವಿದೆ. ಪ್ರವಾಸಿ ತಾಣಗಳು- ಉತ್ತರ ಕನ್ನಡ ಜಿಲ್ಲೆಯ ಹಲವು ಪ್ರವಾಸಿ ತಾಣಗಳನ್ನು ನೋಡಲು, ದಾಂಡೇಲಿಯನ್ನು ಕೇಂದ್ರ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ಇಲ್ಲಿಗೆ ಹತ್ತಿರದ ಪ್ರವಾಸಿ ತಾಣಗಳೆಂದರೆ, ಉಳವಿ ಸಿಂಥೇರಿ ರಾಕ್ಸ್ ಅಣಶಿ ಅರಣ್ಯಧಾಮ ಸೂಪಾ ಅಣೆಕಟ್ಟು ವಸತಿ - ಈ ಊರಿನಲ್ಲಿ ಹಲವು ಖಾಸಗಿ ಹೋಟೆಲುಗಳಲ್ಲಿ ವಸತಿ ವ್ಯವಸ್ಥೆ ಲಭ್ಯವಿದೆ. ಇಡಗುಂಜಿ ಮಹಾ ಗಣಪತಿ ದೇವಾಲಯ : ಇಡಗುಂಜಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಒಂದು ಹಿಂದೂ ಪುಣ್ಯಕ್ಷೇತ್ರ. ಪ್ರತಿ ವರ್ಷ ಒಂದು ದಶಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬರುವ ಇಲ್ಲಿನ ಗಣೇಶ ದೇವಾಲಯ ಬಹು ಪ್ರಸಿದ್ಧಿ. ಇದು ಹೊನ್ನಾವರದಿಂದ ೧೪ ಕಿ.ಮಿ ದೂರದಲ್ಲಿದ್ದು, ನವಿಲುಗೊಣದಿಂದ ೨೮ ಕಿ.ಮಿ ದೂರದಲ್ಲಿದೆ. ಸೋಂದಾ ಶ್ರೀ ವಾದಿರಾಜ ಬೃಂದಾವನ : ಸೋಂದಾ ಕ್ಷೇತ್ರವು ಕರ್ನಾಟಕದಲ್ಲಿರುವ ಪವಿತ್ರ ಸ್ಥಳಗಳಲ್ಲಿ ಒಂದು. ವಿವಿಧ ಪ್ರದೇಶದ ಜನರಿಂದ ಸೋಂದಾ, ಸೋದೆ, ಸ್ವಾದಿ ಮುಂತಾದ ಹೆಸರಿನಿಂದ ಕರೆಯಲ್ಪಡುವ ಈ ಸ್ಥಳವು ಉತ್ತರ ಕನ್ನಡ ಜಿಲ್ಲೆಯ ಸಿರ್ಸಿಯ ಸಮೀಪವಿದೆ. ಇದು ಬೆಂಗಳೂರಿನಿಂದ 450 ಕಿ.ಮೀ. ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ಪಟ್ಟಣದಿ೦ದ 25 ಕಿಲೋ ಮೀಟರ್ ದೂರದಲ್ಲಿದೆ. ಸಿರ್ಸಿಯಿಂದ ತಲುಪಲು ಸಾಕಷ್ಟು ರಾಜ್ಯ ಸಾರಿಗೆ ಬಸ್ ಮತ್ತು ಖಾಸಗಿ ವಾಹನಗಳ ಸೌಕರ್ಯ ಇದೆ. ಇಲ್ಲಿ ಮಾಧ್ವ ಯತಿಗಳಲ್ಲೊಬ್ಬರಾದ ಮತ್ತು ದಾಸ ಸಾಹಿತ್ಯದಲ್ಲಿಯೂ ಕೊಡುಗೆ ಸಲ್ಲಿಸಿರುವ ವಾದಿರಾಜರ ಬೃಂದಾವನವಿದೆ. ಇಲ್ಲಿ ಶ್ರೀ ಜೈನಮಠ ಮತ್ತು ಶ್ರೀ ಸ್ವಣ೯ವಲ್ಲಿಮಠಗಳೂ ಇವೆ. ಇದು ಪ್ರಕೃತಿ ಸೌಂದರ್ಯ ವೀಕ್ಷಣಿಗೂ ಸೂಕ್ತ ಸ್ಥಳವಾಗಿದೆ. ಈ ಕ್ಷೇತ್ರದಲ್ಲಿ ವಾದಿರಾಜರ ಬೃಂದಾವನವಲ್ಲದೆ, ತ್ರಿವಿಕ್ರಮ ದೇವರ ಮತ್ತು ಭೂತರಾಜರ ಗುಡಿಗಳಿವೆ. ತ್ರಿವಿಕ್ರಮ ದೇವರ ಗುಡಿಯಲ್ಲಿ ವಾದಿರಾಜರು ಪೂಜೆ ಸಲ್ಲಿಸುತ್ತಿದ್ದರೆಂದು ಹೇಳಲಾಗುತ್ತದೆ. ವಾದಿರಾಜರಿಗೆ ಸಂಬಂಧಿಸಿದ ಕೆಲವು ಕೃತಿ, ಹಾಡುಗಳಲ್ಲಿ ಈಬಗ್ಗೆ ಉಲ್ಲೇಖಿಸಲಾಗಿದೆ. ಭೂತರಾಜರ ಗುಡಿಇಲ್ಲಿರುವ ಭೂತರಾಜರ ಗುಡಿಗೆ ಸಂಬಂಧಿಸಿದಂತೆ ಅನೇಕ ದಂತಕಥೆಗಳಿವೆ. ತನ್ನ ಪ್ರಶ್ನೆಗಳ ಮೂಲಕ ವಾದಿರಾಜರನ್ನು ಸೋಲಿಸಿ, ಅವರಿಗೆ ಉಪದ್ರ ಕೊಡಬೇಕೆಂದು ಬಂದ ಭೂತಕ್ಕೆ ತಕ್ಕ ಉತ್ತರ ಕೊಟ್ಟು ವಾದಿರಾಜರು ಅದನ್ನು ಸೋಲಿಸಿದರೆಂಬ ಪ್ರತೀತಿ ಇದೆ. ಆ ಕಾರಣದಿಂದ ಭೂತ ವಾದಿರಾಜರ ಸೇವಕನಾಗಿ, ಈ ಕ್ಷೇತ್ರದಲ್ಲಿ ನೆಲೆಸಿದೆ ಎಂದು ಸ್ಥಳೀಯರ ನಂಬಿಕೆಯಾಗಿದೆ. ಈಗಲೂ ಮಾನಸಿಕ ರೋಗಗಳಿಂದ ನರಳುತ್ತಿರುವ( ದೆವ್ವ ಹಿಡಿದವರು ಎಂದು ಹೇಳಲಾಗುವವರು) ಜನರನ್ನು ಈ ಸ್ಥಳಕ್ಕೆ ಕರೆತರಲಾಗುತ್ತದೆ. ಅವರು ಭೂತರಾಜರಿಗೆ ಹರಕೆ,ಸೇವೆಗಳನ್ನು ಸಲ್ಲಿಸುವುದರಿಂದ ಅವರ ಮನೋವಿಕಾರಗಳು ದೂರವಾಗುತ್ತದೆ ಎಂದು ಜನರ ನಂಬಿಕೆಯಾಗಿದೆ. ವಾದಿರಾಜರ ಬೃಂದಾವನದ ಸಮೀಪದಲ್ಲಿ ಧವಳ ಗಂಗಾ ಎಂಬ ಸರೋವರವಿದೆ. ಈ ಕೊಳದ ಒಂದು ಮೂಲೆಯನ್ನು ಭೂತರಾಜರ ಸ್ಥಳ ಎಂದು ಕರೆಯಲಾಗುತ್ತದೆ. ಆ ಸ್ಥಳವನ್ನು ಜನರು ಉಪಯೋಗಿಸುವುದಿಲ್ಲ. ವಾದಿರಾಜರು ಧವಳ ಗಂಗೆಯ ಗಂಗಾಧರ ಮಹಾಲಿಂಗ ಎಂದು ಶಿವನನ್ನು ಸ್ತುತಿಸಿರುವ ಕೀರ್ತನೆಯು ಇದೇ ಸರೋವರದ ಕುರಿತಾಗಿದೆ. ತಪೋವನದಟ್ಟ ಕಾಡಿನ ನಡುವೆ ಇರುವ ಒಂದು ಪ್ರದೇಶದಲ್ಲಿ ವಾದಿರಾಜರು ತಪಸ್ಸು ಮಾಡುತ್ತಿದ್ದರೆಂದು ಹೇಳಲಾಗುತ್ತದೆ. ಶಾಲ್ಮಲಾ ನದಿ ಇಲ್ಲಿ ಸಣ್ಣದಾಗಿ ಹರಿಯತ್ತದೆ. ನದಿ ತೀರದ ಬಂಡೆಯೊಂದರೆಲ್ಲಿ ವಾದಿರಾಜರ ಇಷ್ಟ ದೈವವಾದ ಹಯಗ್ರೀವ ದೇವರ ಚಿತ್ರವನ್ನು ಕಾಣಬಹುದಾಗಿದೆ. ಹತ್ತಿರದ ಪ್ರೇಕ್ಷಣೀಯ ಸ್ಥಳಗಳು ಸಿರ್ಸಿ ಮಾರಿಕಾಂಬಾ ದೇವಸ್ಥಾನ, ಸಹಸ್ರಲಿಂಗ ಮತ್ತು ಯಾಣ ಇಲ್ಲಿಗೆ ಹತ್ತಿರದ ಪ್ರೇಕ್ಷಣೀಯ ಸ್ಥಳಗಳು. ಗೇರಸೊಪ್ಪಾ ಚರ್ತುಮುಖ ಬಸದಿ, ಶರಾವತಿ ಕಣಿವೆ : ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದಲ್ಲಿ ಹುಟ್ಟುವ ಶರಾವತಿ ಕರ್ನಾಟಕದ ಪ್ರಮುಖ ನದಿಗಳಲ್ಲೊಂದು. ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುವ ಶರಾವತಿ ಹರಿಯುವ ಉದ್ದ ಸುಮಾರು ೧೨೦ ಕಿ.ಮೀ. ಹೊನ್ನಾವರದಲ್ಲಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆ ಕರ್ನಾಟಕದಲ್ಲೇ ಅತ್ಯಂತ ಉದ್ದದ ಸೇತುವೆ. ಶರಾವತಿ ಕಣಿವೆ ನೋಡಲು ಬಹು ಸುಂದರ. ಜೋಗದಲ್ಲಿ ಶರಾವತಿ ೯೦೦ ಅಡಿ ಧುಮುಕಿ ಜೋಗ ಜಲಪಾತವನ್ನು ಸೃಷ್ಟಿಸಿದೆ. ಸಾಗರದ ಬಳಿ ಲಿಂಗನಮಕ್ಕಿಯಲ್ಲಿ ಶರಾವತಿಗೆ ಆಣೆಕಟ್ಟನ್ನು ಕಟ್ಟಲಾಗಿದೆ. ಆಣೆಕ‌ಟ್ಟಯ ಕೆಳಭಾಗದಲ್ಲಿ ಶರಾವತಿ ಜಲವಿದ್ಯುದಾಗಾರ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ದೀರ್ಘಕಾಲದವರೆಗೆ ಕರ್ಣಾಟಕದ ವಿದ್ಯುತ್ ಬೇಡಿಕೆಯ ಬಹು ಪಾಲನ್ನು ಈ ಯೋಜನೆಯೇ ಪೂರೈಸುತ್ತಿತ್ತು ಮುಂಡಗೋಡ ಟಿಬೇಟಿಯನ್ ದೇವಾಲಯಗಳು : ಮುಂಡಗೋಡು ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇದು ಸಿರ್ಸಿಯಿಂದ ಹುಬ್ಬಳ್ಳಿಗೆ ಹೋಗುವ ದಾರಿಯಲ್ಲಿ ಬರುತ್ತದೆ. ಪ್ರವಾಸಿ ತಾಣಗಳು - ಟಿಬೆಟಿಯನ್ ವಸಾಹತು ಬಚನಾಕಿ ಅಣೆಕಟ್ಟು ಅತ್ತಿವೇರಿ ಪಕ್ಷಿಧಾಮ ಸಿರ್ಸಿ ಸಹಸ್ರಲಿ೦ಗ : ಇದು ಸಿರ್ಸಿ ತಾಲ್ಲೂಕಿನಲ್ಲಿರುವ ಪ್ರೇಕ್ಷಣಿಯ ಸ್ಟಳವಾಗಿದೆ. ಶಾಲ್ಮಲಾ ನದಿಯಲ್ಲಿ ಕಂಡುಬರುವ ಲಿಂಗಗಳು. ಸಹಸ್ರ ಎಂದರೆ ಸಂಸ್ಸ್ಕತದಲ್ಲಿ ಸಾವಿರ ಎಂದು ಅರ್ಥ. ಸಾವಿರ ಲಿಂಗಗಳು ಕಂದುಬರುತ್ತದೆ. ಶಿವಗಂಗಾ ಪಾಲ್ಸ್ , ಜಡ್ಡಿಗದ್ದೆ, ಸಿರ್ಸಿ : ಸಿರ್ಸಿಯಿಂದ ೪೫ ಕಿ.ಮಿ. ದೂರದಲ್ಲಿದೆ. ಜಲಪಾತದ ಸುತ್ತಲೂ ದಟ್ಟವಾದ ಅರಣ್ಯ ಕಂಡುಬರುತ್ತದೆ. ಸಹ್ಯಾದ್ರಿ ಪರ್ವತದಲ್ಲಿ ಕಾಣುವ ಈ ಜಲಪಾತವು ಸಿರ್ಸಿ, ಯಲ್ಲಾಪುರ ಹಾಗೂ ಅಂಕೋಲಾ ತಾಲ್ಲೂಕುಗಳ ಗಡಿ ಪ್ರದೇಶದಲ್ಲಿದೆ. ೭೪ ಅಡಿ ಎತ್ತರದಿಂದ ದುಮುಕುತ್ತದೆ. ಈ ನದಿಯ ಮದ್ಯದಲ್ಲಿ ಗಣೇಶ ದೇವಾಲಯವು ಕಾಣ ಬರುತ್ತದೆ. ಆದ್ದರಿಂದ ಈ ಸ್ಟಳಕ್ಕೆ ಗಣೇಶ್ಪಾಲ್ ಎಂದು ಹೆಸರಿಡಿದು ಕರೆಯುತ್ತಾರೆ. ಇಲ್ಲಿ ಪ್ರತಿ ವರ್ಷ ಜಾತ್ರೆ ನಡೆಯುತ್ತದೆ. ಈಶಾನೆ /ಕಲ್ಯಾಣಿ ಗುಡ್ಡ ಕಾನಮುಸ್ಕಿ, ಸಿರ್ಸಿ : ಕೊಂಕಿಕೋಟೆ, ಜಡ್ಡಿಗದ್ದೆ, ಸಿರ್ಸಿ ಪ್ರಮುಖ ಎಜುಕೇಶನ್ ಸ೦ಸ್ಥೆಗಳು ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆ ಭಟ್ಕಳ(೧೯೧೯) ತರಬಿಯತ್ ಎಜ್ಯುಕೇಶನ್ ಸೂಸೈಟಿ ಭಟ್ಕಳ ಭಟ್ಕಳ ಎಜುಕೇಶನ್ ಟ್ರಸ್ಟ್ ಮುಸ್ಲಿಮ್ ಎಜ್ಯಕೇಶನ್ ಸೂಸೈಟಿ ಮುರುಢೇಶ್ವರ ಎಮ್.ಇ.ಎಸ್ ಎಜುಕೇಶನ್ ಟ್ರಸ್ಟ್ ಆವೆ ಮರಿಯಾ ಎಜುಕೇಶನ್ ಟ್ರಸ್ಟ್ ಪ್ರೋಗ್ರೆಸ್ಸಿವ್ ಎಜುಕೇಶನ್ ಟ್ರಸ್ಟ್ ಡೊನ್ ಬೊಸ್ಕೊ ವಎಜುಕೇಶನ್ ಟ್ರಸ್ಟ್ ಆರ್.ನ್.ಸ್ ಪೊಲಿಟೇಕ್ನಿಕ್ ಎಜುಕೇಶನ್ ಟ್ರಸ್ಟ್ ಶ್ರೀ ಮಾತಾ ವಿದ್ಯಾನಿಕೇತನ, ಶಿರ್ಸಿ ಕೆನರಾ ಎಜುಕೇಶನ ಸೊಸೈಟಿ ಕೆನರಾ ವೆಲ್ಫ಼ೇರ್ ಟೃಸ್ಟ್, ಅಂಕೋಲಾ ಎಮ್.ಪಿ.ಇ ಸೊಸೈಟಿ ಯ ಎಸ್.ಡಿ.ಎಮ್ ವಿದ್ಯಾ ಸಂಸ್ಥೆಗಳು. ಸಿದ್ದಾಪುರ : ಪಶ್ಚಿಮ ಘಟ್ಟಗಳ ಸೆರಗಿನಲ್ಲಿದ್ದು ಮಲೆನಾಡಿನ ಭಾಗವಾಗಿರುವ ಸಿದ್ಧಾಪುರದ ಸುತ್ತ ಮುತ್ತ ಕಾಡುಗಳೂ, ಬೆಟ್ಟ ಗುಡ್ಡಗಳೂ ವಿಪುಲವಾಗಿದ್ದು ಚಾರಣ ಹವ್ಯಾಸಿಗಳಿಗೆ ಪ್ರಿಯವಾಗಿದೆ. ಸಮೀಪದಲ್ಲಿ ಅನೇಕ ಜಲಪಾತಗಳಿದ್ದು ಅವುಗಳಲ್ಲಿ ಕೆಲ ಪ್ರಸಿದ್ಧವಾದವುಗಳೆಂದರೆ ಜೋಗ ಜಲಪಾತ - ಸಿದ್ಧಾಪುರದಿಂದ ೨೦ ಕಿ.ಮೀ ದೂರದಲ್ಲಿದೆ. ಹೊನ್ನೇಮರಡು - ೨೫ ಕಿ.ಮೀ ದೂರದಲ್ಲಿ ತಾಳಗುಪ್ಪಾದ ಸಮೀಪದಲ್ಲಿದೆ. ಬುರುಡೆ ಜಲಪಾತ - ೩೦ ಕಿ.ಮೀ ದೂರದಲ್ಲಿ ಕ್ಯಾದಗಿಯ ಸಮೀಪದಲ್ಲಿದೆ. ಉಂಚಳ್ಳಿ ಜಲಪಾತ (ಕೆಪ್ಪ ಜೋಗ) - ೨೮ ಕಿ.ಮೀ ದೂರ ವಾಟೆಹಳ್ಳ - ೩೪ ಕಿ.ಮೀ. ದೂರ ಸುತ್ತಮುತ್ತಲಿನ ಧಾರ್ಮಿಕ ಸ್ಥಳಗಳು. ಶಂಕರಮಠ,ಭುವನಗಿರಿ , ಇಟಗಿ ಮತ್ತು ಚಂದ್ರಗುತ್ತಿ, ಬಿಳಗಿ ವಿಶೇಷ ಸ್ಥಳ : ದೊಡ್ಮನೆ ದೊಡ್ಮನೆಯು ಕರ್ನಾಟಕದ ಮಾಜಿ ಮುಖ್ಯ ಮಂತ್ರಿಗಳಾದ ದಿ.ರಾಮಕೃಷ್ಣ ಹೆಗಡೆಯವರ ಜನ್ಮಸ್ಥಳ.ಇದು ಸಿದ್ಧಾಪುರ ತಾಲೂಕು ಕೇಂದ್ರದಿಂದ ಸುಮಾರು ೩೦ಕೀ.ಮಿ. ದೂರವಿದೆ ತಾಲೂಕುಗಳು ಅಂಕೋಲಾ ಭಟ್ಕಳ ಹಳಿಯಾಳ ಹೊನ್ನಾವರ ಜೋಯಿಡಾ ಕಾರವಾರ ಕುಮಟಾ ಮುಂಡಗೋಡು ಸಿದ್ಧಾಪುರ ಸಿರ್ಸಿ ಯಲ್ಲಾಪುರ ದಾಂಡೇಲಿ ಜಿಲ್ಲೆಯ ಪ್ರಮುಖ ವ್ಯಕ್ತಿಗಳು ಯಕ್ಷಗಾನ ಕಲಾವಿದರು: ಶಂಭು ಹೆಗಡೆ , ಮಹಾಬಲ ಹೆಗಡೆ , ಚಿಟ್ಟಾಣಿ ರಾಮಚಂದ್ರ ಹೆಗಡೆ, ತೋಟಿಮನೆ ಗಣಪತಿ ಹೆಗಡೆ ಸಾಹಿತಿಗಳು: ದಿನಕರ ದೇಸಾಯಿ, ಗೌರೀಶ ಕಾಯ್ಕಿಣಿ, ಯಶವಂತ ಚಿತ್ತಾಲ, ಗಂಗಾದರ ಚಿತ್ತಾಲ, ಅರವಿಂದ ನಾಡಕರ್ಣಿ, ಜಿ.ಎಸ್.ಅವಧಾನಿ, ಜಿ.ಎಚ್.ನಾಯಕ, ಜಯಂತ ಕಾಯ್ಕಿಣಿ, ವಿವೇಕ ಶಾನಭಾಗ, ಅಶೋಕ ಹೆಗಡೆ, ಶ್ರೀಧರ ಬಳಗಾರ, ಸುನಂದಾ ಕಡಮೆ, ಸಂದೀಪ ನಾಯಕ, ವಿಷ್ಣು ನಾಯ್ಕ, ಆರ್.ವಿ.ಭಂಡಾರಿ, ನಾ.ಸು.ಭರತನಹಳ್ಳಿ, ಸಚ್ಚಿದಾನಂದ ಹೆಗಡೆ (ಹೊನ್ನಾವರ), ಗೀತಾ ವಸಂತ, ಶಿವಲೀಲಾ ಹುಣಸಗಿ ಯಲ್ಲಾಪುರ ಸುಧಾ ಶರ್ಮಾ ಚವತ್ತಿ, ಅರವಿಂದ ಕರ್ಕಿಕೋಡಿ, ಆರ್.ಎನ್.ನಾಯಕ, ಫಾಲ್ಗುಣ ಗೌಡ, ಉಮೇಶ ಮು೦ಡಳ್ಳಿ,ಭಟ್ಕಳ, ಪಿ.ಆರ್.ನಾಯ್ಕ್, ಹೊಳೆಗದ್ದೆ, ಎನ್.ಆರ್.ಗಜು, ಕುಮಟಾ, ಶ್ರೀಮತಿ ರೇಷ್ಮಾ ಉಮೇಶ ಭಟ್ಕಳ, ಎಸ್.ಜ಼ಡ್, ಷರೀಪ್ ಭಟ್ಕಳ, ಎಮ್.ಐ. ಹೆಗಡೆ ಮಾಳ್ಕೋಡ್, ಪ್ರೊ. ಆರ್. ಎಸ್. ನಾಯಕ (ವಿಮರ್ಶೆ), ರವಿ ಮಾಗರ್ ಮಂಕಿ, ಹೊನ್ನಾವರ (ಕವನ), ಹುಳಗೋಳ ನಾಗಪತಿ ಹೆಗಡೆ (ಕಥೆ ಗೋಪಾಲಕೃಷ್ಣ ನಾಯಕ ( ಕಾಂತ್ ಮಾಸ್ತರ್ ), ವಸುಶ್ರೀ ಹಳೆಮನೆ (ಸಂಗೀತ). ರಾಜಕಾರಣಿಗಳು: ಗಣೇಶ ಹೆಗಡೆ,ರಾಮಕೃಷ್ಣ ಹೆಗಡೆ, ಜುಕಾಕೋ ಶಮ್ಸುದ್ದೀನ್, ಎಸ್.ಎಂ.ಯಾಹ್ಯಾ, ಆರ್.ವಿ.ದೇಶಪಾಂಡೆ, ಅನಂತ ಕುಮಾರ ಹೆಗಡೆ, ವಿಶ್ವೇಶ್ವರ ಹೆಗಡೆ ಕಾಗೇರಿ, ಅರಬೈಲ್ ಶಿವರಾಮ ಹೆಬ್ಬಾರಶಿವಾನಂದ ನಾಯ್ಕ, ಇನಾಯತುಲ್ಲಾ ಶಾಬಂದ್ರಿ, ಜಿ.ಎನ್.ಹೆಗಡೆ ಮುರೇಗಾರ್, ದತ್ತಾತ್ರೇಯ ವೈದ್ಯ ಕಕ್ಕಳ್ಳಿ, ವಿವೇಕಾನಂದ ವೈಧ್ಯ, ಮಾರ್ಗರೇಟ್ ಆಳ್ವ.ಪರ್ವೇಝ್ ಕಾಶಿಮಿಜಿ, ಡಿ.ಎಚ್.ಶಬ್ಬರ್, ಮುಝಮ್ಮಿಲ್ ಕಾಝಿಯಾ , ಕೆ.ಎನ್.ನಾಯ್ಕ ಪತ್ರಕರ್ತರು: ನಾಗೇಶ ಹೆಗಡೆ, ತಿಮ್ಮಪ್ಪ ಭಟ್, ಪರಮೇಶ್ವರ ಗುಂಡ್ಕಲ್, ಹರಿಪ್ರಕಾಶ್ ಕೋಣೆಮನೆ, ರವಿ ಹೆಗಡೆ, ನಿರಂಜನ್ ವಾನಳ್ಳಿ, ಶಿವಾನಂದ ಕಳವೆ, ಮಹಾಬಲ ಸೀತಾಳಭಾವಿ, ಜಿಲ್ಲೆಯ ಪ್ರಮುಖ ದಿನಪತ್ರಿಕೆಗಳು& ಟಿ.ವಿ ಮಾಧ್ಯಮ ದಿನಪ್ರತಿಕೆಗಳು ಕರಾವಳಿ ಮುಂಜಾವು ಲೋಕಧ್ವನಿ ಜನಮಾದ್ಯಮ ನುಡಿಜೇನು ಟಿ.ವಿ ಮಾಧ್ಯಮ ಸುಮುಖ ಟಿವಿ ಶ್ರೀ ಮಾರಿಕಾಂಬಾ ಟಿವಿ ವಿಸ್ಮಯ ಟಿ.ವಿ ಬಾಹ್ಯಸಂಪರ್ಕಗಳು ಉಲ್ಲೇಖಗಳು ಕರ್ನಾಟಕದ ಜಿಲ್ಲೆಗಳು ಉತ್ತರ ಕನ್ನಡ ಜಿಲ್ಲೆ
1080
https://kn.wikipedia.org/wiki/%E0%B2%B6%E0%B3%8B%E0%B2%A7%E0%B2%BF%E0%B2%B8%E0%B2%BF%E0%B2%A6%E0%B2%B5%E0%B2%B0%20%E0%B2%B9%E0%B3%86%E0%B2%B8%E0%B2%B0%E0%B3%81%E0%B2%97%E0%B2%B3%E0%B2%A8%E0%B3%8D%E0%B2%A8%E0%B3%87%20%E0%B2%87%E0%B2%A1%E0%B2%B2%E0%B2%BE%E0%B2%A6%20%E0%B2%B6%E0%B3%8B%E0%B2%A7%E0%B2%A8%E0%B3%86%E0%B2%97%E0%B2%B3%20%E0%B2%AA%E0%B2%9F%E0%B3%8D%E0%B2%9F%E0%B2%BF
ಶೋಧಿಸಿದವರ ಹೆಸರುಗಳನ್ನೇ ಇಡಲಾದ ಶೋಧನೆಗಳ ಪಟ್ಟಿ
ಈ ಲೇಖನ ಶೋಧನೆಯನ್ನೂ, ಶೋಧಕರನ್ನೂ (ಯಾರ ಹೆಸರಿಂದ ಆ ಶೋಧನೆ ಕರೆಯಲ್ಪಡುತ್ತದೋ ಅವರನ್ನು) ಪಟ್ಟಿ ಮಾಡುತ್ತದೆ. ಆರ್ಕಿಮಿಡೀಸ್‌ನ ಸ್ಕ್ರೂ – ಆರ್ಕಿಮಿಡೀಸ್ ಆರ್ಮ್‌ಸ್ಟ್ರಾಂಗ್ ಪಿಸ್ತೂಲು – ವಿಲ್ಲಿಯಮ್ ಜಾರ್ಜ್ ಆರ್ಮ್‌ಸ್ಟ್ರಾಂಗ್ ಬೇಕಲೈಟ್ – ಲಿಯೋ ಬೇಕಲ್ಯಾಂಡ್ ಬಾರ್ಬೀ ಬೊಂಬೆ – ಬಾರ್ಬರಾ ರುತ್ ಹ್ಯಾಂಡ್ಲರ್‌ನ ಮಗಳು, ಬಾರ್ಬಿಯ ಸೃಷ್ಟಿಕರ್ತೆ. ಬೆಸ್ಸಿಮರ್ ಪರಿವರ್ತಕ – ಹೆನ್ರಿ ಬೆಸ್ಸಿಮರ್ ಬಿರೊ, (ಬಾಲ್‌ಪಾಯಿಂಟ್ ಪೆನ್) – ಲ್ಯಾಸ್ಲೋ ಬಿರೊ ಬೋವೀ ಚಾಕು – ಜಿಮ್ ಬೋವೀ ಬ್ರೆಯ್ಲ್ – ಲೂಯಿ ಬ್ರೆಯ್ಲ್ ಬ್ರೌನಿಂಗ್ ಶಸ್ತ್ರಾಸ್ತ್ರಗಳು, ಬ್ರೌನಿಂಗ್ ಆಟೊಮ್ಯಾಟಿಕ್ ರೈಫಲ್ ಅನ್ನು ಒಳಗೊಂಡು – ಜಾಹ್ನ್ ಬ್ರೌನಿಂಗ್ ಬುನ್ಸನ್ ಬರ್ನರ್ – ರಾಬರ್ಟ್ ಬುನ್ಸನ್ ಕೊಲ್ಟ್ ಶಸ್ತ್ರಾಸ್ತ್ರಗಳು ರಿವಾಲ್ವರ್ – ಸ್ಯಾಮ್ಯುಯೆಲ್ ಕೊಲ್ಟ್ ಡ್ಯಾಗೆರ್ರೊಟೈಪ್ – ಜ್ಯಾಕ್ವಿಸ್ ಡ್ಯಾಗೆರ್ ಡೇವಿ ಹಣತೆ – ಹಮ್ಫ್ರಿ ಡೇವಿ ಡೀಸಲ್ ಇಂಜಿನ್ – ರುಡೊಲ್ಫ್ ಡೀಸಲ್ ಡಾಲ್ಬಿ ಸ್ಟೀರಿಯೋ, ಡಾಲ್ಬಿ ಸರೌಂಡ್ ಮತ್ತು ಡಾಲ್ಬಿ ಪ್ರೋ ಲಾಜಿಕ್ – ರೇ ಡೊಲ್ಬಿ ಡಾಪ್ಲರ್ ರೇಡಾರ್ – ಕ್ರಿಶ್ಚಿಯನ್ ಡಾಪ್ಲರ್ ಫೆರ್ರಿಸ್ ಗಾಲಿ – ಜಾರ್ಜ್ ವಾಷಿಂಗ್ಟನ್ ಗಾಲೆ ಫೆರ್ರಿಸ್, ಜೂ. ಫ್ರ್ಯಾಂಕ್ಲಿನ್ ಸ್ಟವ್ – ಬೆಂಜಮಿನ್ ಫ್ರ್ಯಾಂಕ್‌ಲಿನ್ Galil assault rifle – Israel Galili Gatling gun – Richard J. Gatling Geiger counter – Hans Geiger Geiger-Mueller tube – Hans Geiger and W. Mueller M1 Garand rifle – John Garand Goretex – Wilbert Gore Guillotine – Joseph-Ignace Guillotin did not invent the guillotine, but proposed the use of the mechanical device to carry out death penalties in France. Halligan bar – Hugh Halligan Hammond Organ – Laurens Hammond Jacquard loom – Joseph Marie Jacquard Josephson junction – Brian David Josephson The Avtomat Kalashnikova series of weapons, including the AK-47 – Mikhail Kalashnikov Mae West inflatable life jacket – Mae West ಮೇಸನ್ ಹೂಜಿ – ಜಾಹ್ನ್ ಮೇಸನ್ ಮ್ಯಾಕ್ಸಿಮ್ ಪಿಸ್ತೂಲು – ಹಿರಾಮ್ ಮ್ಯಾಕ್ಸಿಮ್ Molotov cocktail – invented by the Finnish army, and named after Vyacheslav Molotov, the Soviet Minister of War Moog Synthesizer - – Robert Moog ಮೊರ್ಸ್ ಕೋಡ್ – ಸ್ಯಾಮ್ಯುಯೆಲ್ ಮೋರ್ಸ್ ಪವ್ಲೋವ – ಆನ್ನ ಪವ್ಲೋವ ಪ್ಯಾಸ್ಚರೈಸೇಶನ್ – ಲೂಯಿ ಪ್ಯಾಸ್ಚರ್ Penkalo (ballpoint pen) – Slavoljub Eduard Penkala ರಾಮನ್ ಸ್ಪೆಕ್ಟ್ರೋಸ್ಕೋಪಿ – ಸಿ. ವಿ. ರಾಮನ್ ರಿಕ್ಟರ್ ಮಾಪಕ – ಚಾರ್ಲ್ಸ್ ರಿಕ್ಟರ್ ಸ್ಯಾಂಡ್‌ವಿಚ್ – ಅರ್ಲ್ ಆಫ್ ಸ್ಯಾಂಡ್‍ವಿಚ್ Saxophone – Adolphe Sax, Belgian music instrument designer Shrapnel shell – Henry Shrapnel Sousaphone – John Philip Sousa Stark spectroscopy – Johannes Stark Thompson submachine gun – John T. Thompson ಟೆಸ್ಲಾ ಕಾಯಿಲ್ – ನಿಕೋಲಾ ಟೆಸ್ಲಾ ಥೆರೆಮಿನ್ – ಲಿಯೋನ್ ಥೆರೆಮಿನ್ ಉಝಿ ಉಪ-ಮಶೀನ್ ಗನ್ – ಊಝೀಲ್ ಗಾಲ್ Wellington boot – Duke of Wellington Westinghouse air brake – George Westinghouse Winchester repeating rifle – named after chief investor Oliver F. Winchester Zeppelin – Ferdinand von Zeppelin ಇವುಗಳನ್ನೂ ನೋಡಿ ಶೋಧನೆಗಳ ಪಟ್ಟಿ ಶೋಧಕರ ಪಟ್ಟಿ ವೈಜ್ಞಾನಿಕ ವಿಷಯಗಳ ಪಟ್ಟಿ ವಿಜ್ಞಾನ ವಿಜ್ಞಾನಿಗಳು
1085
https://kn.wikipedia.org/wiki/%E0%B2%AE%E0%B2%95%E0%B3%8D%E0%B2%95%E0%B2%B3%20%E0%B2%A6%E0%B2%BF%E0%B2%A8%E0%B2%BE%E0%B2%9A%E0%B2%B0%E0%B2%A3%E0%B3%86
ಮಕ್ಕಳ ದಿನಾಚರಣೆ
Infobox holiday with missing field Infobox holiday (other) ಮಕ್ಕಳ ದಿನಾಚರಣೆಯು ಮಕ್ಕಳ ಗೌರವಾರ್ಥವಾಗಿ ವಾರ್ಷಿಕವಾಗಿ ಆಚರಿಸಲಾಗುವ ಸ್ಮರಣಾರ್ಥ ದಿನಾಂಕವಾಗಿದೆ, ಅವರ ಆಚರಣೆಯ ದಿನಾಂಕವು ದೇಶದಿಂದ ಬದಲಾಗುತ್ತದೆ.೧೯೨೫ ರಲ್ಲಿ, ಜಿನೀವಾದಲ್ಲಿ ಮಕ್ಕಳ ಕಲ್ಯಾಣ ಕುರಿತ ವಿಶ್ವ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಮಕ್ಕಳ ದಿನವನ್ನು ಮೊದಲು ಘೋಷಿಸಲಾಯಿತು.೧೯೫೦ರಿಂದ, ಹೆಚ್ಚಿನ ಕಮ್ಯುನಿಸ್ಟ್ ಮತ್ತು ನಂತರದ ಕಮ್ಯುನಿಸ್ಟ್ ದೇಶಗಳಲ್ಲಿ ಇದನ್ನು ಜೂನ್ 1 ರಂದು ಆಚರಿಸಲಾಗುತ್ತದೆ. ವಿಶ್ವ ಮಕ್ಕಳ ದಿನವನ್ನು ನವೆಂಬರ್ ೨೦,೧೯೫೯ ರಂದು UN ಜನರಲ್ ಅಸೆಂಬ್ಲಿಯಿಂದ ಮಕ್ಕಳ ಹಕ್ಕುಗಳ ಘೋಷಣೆಯ ನೆನಪಿಗಾಗಿ ನವೆಂಬರ್ 20 ರಂದು ಆಚರಿಸಲಾಗುತ್ತದೆ ಕೆಲವು ದೇಶಗಳಲ್ಲಿ, ಇದು ಮಕ್ಕಳ ವಾರ ಮತ್ತು ಮಕ್ಕಳ ದಿನವಲ್ಲ. ಮಕ್ಕಳ ದಿನವು ಜೂನ್ ಎರಡನೇ ಭಾನುವಾರದಂದು ಜೂನ್ ೧೮೫೭ ರಲ್ಲಿ ಪ್ರಾರಂಭವಾಯಿತು. ರೆವರೆಂಡ್ ಡಾ. ಚಾರ್ಲ್ಸ್ ಲಿಯೊನಾರ್ಡ್ , ಮ್ಯಾಸಚೂಸೆಟ್ಸ್‌ನ ಚೆಲ್ಸಿಯಾದಲ್ಲಿನ ಯುನಿವರ್ಸಲಿಸ್ಟ್ ಚರ್ಚ್ ಆಫ್ ರಿಡೀಮರ್‌ನ ಪಾದ್ರಿ: ಲಿಯೊನಾರ್ಡ್ ಮಕ್ಕಳಿಗಾಗಿ ಮತ್ತು ವಿಶೇಷ ಸೇವೆಯನ್ನು ಮೀಸಲಿಟ್ಟರು. ಲಿಯೊನಾರ್ಡ್ ಈ ದಿನವನ್ನು ರೋಸ್ ಡೇ ಎಂದು ಹೆಸರಿಸಿದರು, ಆದರೂ ಇದನ್ನು ನಂತರ ಹೂವಿನ ಭಾನುವಾರ ಎಂದು ಹೆಸರಿಸಲಾಯಿತು ಮತ್ತು ನಂತರ ಮಕ್ಕಳ ದಿನ ಎಂದು ಹೆಸರಿಸಲಾಯಿತು.
1090
https://kn.wikipedia.org/wiki/%E0%B2%AF%E0%B2%BE%E0%B2%B8%E0%B2%BF%E0%B2%B0%E0%B3%8D%20%E0%B2%85%E0%B2%B0%E0%B2%BE%E0%B2%AB%E0%B2%A4%E0%B3%8D
ಯಾಸಿರ್ ಅರಾಫತ್
ಯಾಸಿರ್ ಅರಾಫತ್ (ಅರಬಿಕ್: : محمد عبد الرؤوف القدوة الحسيني) (ಜನನ: ಆಗಸ್ಟ್ ೧೯೨೯)ಪ್ಯಾಲಿಸ್ಟೈನ್ ಪ್ರಾಧಿಕಾರದ ಅಧ್ಯಕ್ಷರು(೧೯೯೩ ರಿಂದ, ೧೯೯೬ ರಲ್ಲಿ ಈ ಸ್ಥಾನಕ್ಕೆ ಚುನಾಯಿತರಾದರು). ಫತಾ ದ ನಾಯಕರು ಮತ್ತು ೧೯೬೯ ರಿಂದ ಪ್ಯಾಲೆಸ್ಟೈನ್ ವಿಮೋಚನಾ ಸಂಸ್ಥೆಯ (ಪಿಎಲ್‍ಒ) ಅಧ್ಯಕ್ಷರು. ೧೯೯೪ ರ ಶಾಂತಿ ನೊಬೆಲ್ ಬಹುಮಾನವನ್ನು ಪಡೆದವರಲ್ಲಿ ಒಬ್ಬರು. ಸಾಕಷ್ಟು ವಿವಾದವನ್ನು ಸೃಷ್ಟಿಸಿರುವ ಅರಾಫತ್ ಕೆಲವರ ದೃಷ್ಟಿಯಲ್ಲಿ ಭಯೋತ್ಪಾದಕರಾದರೆ ಇನ್ನು ಕೆಲವರ ದೃಷ್ಟಿಯಲ್ಲಿ ಪ್ಯಾಲೆಸ್ಟೈನ್ ನ ಸ್ವಾತ೦ತ್ರ್ಯ ಹೋರಾಟಗಾರರು. ಇತ್ತೀಚಿನ ಸುದ್ದಿಯೆಂದರೆ ನವೆಂಬರ್ ೧೧, ೨೦೦೪ ರಂದು ಪ್ಯಾರಿಸ್ ನಲ್ಲಿ ಇವರು ನಿಧನರಾದರು. ಜೀವನ ಪ್ರಾಥಮಿಕ ವರ್ಷಗಳು ಅರಾಫತ್ ಅವರ ಹೇಳಿಕೆಯ ಪ್ರಕಾರ ಅವರು ಜನಿಸಿದ್ದು ಜೆರುಸಲೆಂ ನಲ್ಲಿ; ಆದರೆ ಅನೇಕರ ಹೇಳಿಕೆಯ ಪ್ರಕಾರ ಅವರು ಹುಟ್ಟಿದ್ದು ಈಜಿಪ್ಟ್ ದೇಶದ ಕೈರೋ ನಗರದಲ್ಲಿ. ಕೈರೋ ವಿಶ್ವವಿದ್ಯಾಲಯದಲ್ಲಿ ಓದಿದ ಅರಾಫತ್ ೧೯೪೮ ರ ಅರಬ್-ಇಸ್ರೇಲಿ ಯುದ್ಧದಲ್ಲಿ ಪಾಲ್ಗೊಳ್ಳಲು ವಿಫಲ ಯತ್ನ ನಡೆಸಿದರು. ೧೯೫೨ ರಲ್ಲಿ ಪ್ಯಾಲೆಸ್ಟಿನಿಯನ್ ವಿದ್ಯಾರ್ಥಿ ಸ೦ಘದ ಅಧ್ಯಕ್ಷರಾದರು. ೧೯೫೬ ರಲ್ಲಿ ಸಿವಿಲ್ ಇಂಜಿನಿಯರಿ೦ಗ್ ಪದವಿಯನ್ನು ಪಡೆದರಲ್ಲದೆ ಸುಯೆಜ್ ಯುದ್ಧದಲ್ಲಿ ಈಜಿಪ್ಟ್ ನ ಭೂಸೇನೆಯಲ್ಲಿ ಪಾಲ್ಗೊಂಡರು. ಫತಾ ನಂತರ ಕುವೈತ್ ದೇಶಕ್ಕೆ ತೆರಳಿದ ಅರಾಫತ್ ಸ್ವತಂತ್ರ ಪ್ಯಾಲೆಸ್ಟೈನ್ ದೇಶವನ್ನು ಸೃಷ್ಟಿಸುವ ಉದ್ದೇಶವುಳ್ಳ ಫತಾಎಂಬ ಸಂಸ್ಥೆಯನ್ನು ಆರಂಭಿಸಿದರು. ೧೯೬೪ ರಲ್ಲಿ ಒಂದು ಇಸ್ರೇಲಿ ನೀರಿನ ಪಂಪನ್ನು ಸ್ಫೋಟಿಸುವ ಫತಾ ದ ಉದ್ದೇಶ ವಿಫಲವಾಯಿತು. ೧೯೬೮ ರಲ್ಲಿ ಜೋರ್ಡನ್ ದೇಶದ ಅಲ್-ಕರಮೇಹ್ ಗ್ರಾಮದಲ್ಲಿ ಇಸ್ರೇಲಿ ಸೇನೆಯೊ೦ದಿಗೆ ನಡೆದ ತಿಣುಕಾಟದಲ್ಲಿ ಅನೇಕ ಫತಾ ದ ಸೈನಿಕರು ಸತ್ತರೂ ಇಸ್ರೇಲಿ ಸೈನ್ಯವನ್ನು ಹಿಮ್ಮೆಟ್ಟಿಸುವುದರಲ್ಲಿ ಯಶಸ್ವಿಯಾಯಿತು. ಜೋರ್ಡನ್ ೧೯೭೦ ರಲ್ಲಿ ಜೋರ್ಡನ್ ದೇಶ ಮತ್ತು ಪ್ಯಾಲೆಸ್ಟೈನಿಯನ್ ಉಗ್ರವಾದಿಗಳ ನಡುವೆ ಸಾಕಷ್ತು ಭಿನ್ನಾಭಿಪ್ರಾಯಗಳು ತಲೆದೋರಿದವು. ಜೂನ್ ೧೯೭೦ ರಲ್ಲಿ ನೇರ ಯುದ್ಧ ಆರಂಭವಾಯಿತು. ಸಿರಿಯಾ ದೇಶದಿಂದ ಸಹಾಯ ಪಡೆದ ಅರಾಫತ್ ಈ ಸಮಯಕ್ಕೆ ಪ್ಯಾಲೆಸ್ಟೈನ್ ವಿಮೋಚನಾ ಸ೦ಘ (ಪಿಎಲ್‍ಒ) ದ ಸೇನಾನಾಯಕರಾಗಿದ್ದರು. ಜೋರ್ಡನ್ ಗೆ ಇಸ್ರೇಲ್ ಮತ್ತು ಅಮೆರಿಕ ಗಳಿಂದ ಸಹಾಯದ ದೊರೆಯುವ ಲಕ್ಷಣಗಳು ಕಂಡುಬಂದವು. ಕೊನೆಗೆ ಜೋರ್ಡನ್ ಆ ವರ್ಷದ ಸಪ್ಟೆಂಬರ್ ನಲ್ಲಿ ಮೇಲುಗೈ ಸಾಧಿಸಿತು. ಲೆಬನಾನ್ ೧೯೭೩ ರಲ್ಲಿ ಅಮೆರಿಕದ ರಾಷ್ಟ್ರೀಯ ಸುರಕ್ಷಾ ಪ್ರಾಧಿಕಾರದವರು ಪಡೆದ ಮಾಹಿತಿಯ ಮೇರೆಗೆ ಸುಡನ್ ದೇಶದ ಸೌದಿ ರಾಯಭಾರಿ ಕಛೇರಿಯ ಮೇಲೆ ನಡೆದ ದಾಳಿ, ಹಾಗೂ ನಂತರ ಅಮೆರಿಕನ್ ರಾಯಭಾರಿ ಮತ್ತು ಇನ್ನಿತರರ ಕೊಲೆಗೆ ಅರಾಫತ್ ಅವರು ಆದೇಶ ನೀಡಿದರು ಎನ್ನಲಾಯಿತು. ಅರಾಫತ್ ಅವರು ಇದನ್ನು ಅಲ್ಲಗಳೆದರು. ಜೋರ್ಡನ್ ನಿಂದ ಹೊರತಳ್ಳಲ್ಪಟ್ಟ ಮೇಲೆ ಅರಾಫತ್ ರ ಪಿಎಲ್‍ಒ ಲೆಬನಾನ್ ದೇಶದಲ್ಲಿ ನೆಲೆ ಸ್ಥಾಪಿಸಿತು. ಈ ನೆಲೆಗಳಿಂದ ಆಗಾಗ್ಗೆ ಇಸ್ರೇಲ್ ನ ಮೇಲೆ ದಾಳಿ ನಡೆಸಲಾರಂಭಿಸಿತು. ಈ ದಾಳಿಗಳು ನಡೆದಾಗಲೆಲ್ಲ ಇಸ್ರೇಲ್ ಲೆಬನಾನ್ ನಲ್ಲಿದ್ದ ನೆಲೆಗಳ ಮೇಲೆ ಪ್ರತಿದಾಳಿ ನಡೆಸಲಾರಂಭಿಸಿತು. ೧೯೭೨ ರ ಮ್ಯೂನಿಚ್ ಒಲಿಂಪಿಕ್ಸ್ ಸ್ಪರ್ಧೆಯಲ್ಲಿ ೧೧ ಇಸ್ರೇಲಿ ಕ್ರೀಡಾಪಟುಗಳನ್ನು ಅಪಹರಿಸಿ ಕೊಲ್ಲಲಾಯಿತು. ಸಾಮಾನ್ಯವಾಗಿ ಅರಾಫತ್ ರ ಫತಾ ದ ಭಯೋತ್ಪಾದಕ ಅಂಗವೆಂದು ಹೇಳಲಾದಕಪ್ಪು ಸಪ್ಟಂಬರ ಇದನ್ನು ನಡೆಸಿತು ಎಂದು ಆಪಾದಿಸಲಾಯಿತು. ಅರಾಫತ್ ಅವರು ಸಾರ್ವಜನಿಕವಾಗಿ ತಮಗೂ ಮತ್ತು ಈ ಕೃತ್ಯಕ್ಕೂ ಸಂಬಂಧವಿಲ್ಲವೆಂದು ಹೇಳಿದರು. ೧೯೭೪ ರಲ್ಲಿ ಪಿಎಲ್‍ಒ ಗೆ ಪ್ಯಾಲೆಸ್ಟೈನ್ ನ ಜನರ ಪ್ರಾತಿನಿಧಿಕ ಸಂಸ್ಥೆ ಎಂಬ ಮನ್ನಣೆಯನ್ನು ಅರಬ್ ದೇಶಗಳ ನಾಯಕರು ನೀಡಿದರು. ೧೯೭೮ ರ ಲೆಬನಾನ್ ನ ಆಂತರಿಕ ಯುದ್ಧದಲ್ಲಿ ಪಿಎಲ್‍ಒ ಪಾಲ್ಗೊಂಡಿತ್ತು. ಲೆಬನಾನ್ ದೇಶದ ಕ್ರೈಸ್ತ ಸಮುದಾಯದ ಆಪಾದನೆಯ೦ತೆ ಅನೇಕರ ಸಾವಿಗೆ ಅರಾಫತ್ ಅವರೇ ಕಾರಣರು. ಇಸ್ರೇಲ್ ಲೆಬನಾನ್ ನ ಕ್ರೈಸ್ತ ಸಮುದಾಯದ ಪರ ವಹಿಸಿತು ಮತ್ತು ಎರಡು ಮುಖ್ಯ ದಾಳಿಗಳನ್ನು ನಡೆಸಿತು. ಅನೇಕ ಜನ ಪ್ಯಾಲೆಸ್ಟೈನ್ ನ ಪೌರರು ಈ ದಾಳಿಗಳಲ್ಲಿ ಮೃತಪಟ್ಟರು. ಟನೀಸಿಯಾ ೧೯೮೨ ರಲ್ಲಿ ಲೆಬನಾನ್ ನ ಮೇಲೆ ಇಸ್ರೇಲ್ ನ ದಾಳಿಯ ಸಮಯದಲ್ಲಿ ಅರಾಫತ್ ಮತ್ತು ಪಿಎಲ್‍ಒ ಅನ್ನು ಲೆಬನಾನ್ ನಿಂದ ಹೊರಹೋಗಲು ಬಿಡಲಾಯಿತು. ಅರಾಫತ್ ಅವರು ಇ ಬಾರಿ ಟುನೀಸಿಯಾ ದೇಶಕ್ಕೆ ತೆರಳಿ ಅಲ್ಲಿ ತಮ್ಮ ನೆಲೆಯನ್ನು ೧೯೯೩ ರ ವರೆಗೆ ಸ್ಥಾಪಿಸಿದರು. ೧೯೯೩ ರಲ್ಲಿ, ಅಮೆರಿಕದ ಒತ್ತಡದ ಮೇರೆಗೆ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಓಸ್ಲೋ ಒಪ್ಪಂದವನ್ನು ಸ್ಥಾಪಿಸಿದರು. ಇರದಂತೆ, ಐದು ವರ್ಷಗಳಲ್ಲಿ ಪ್ಯಾಲೆಸ್ಟೈನ್ ನಲ್ಲಿ ಸ್ವ-ರಾಜ್ಯ ಉಂಟಾಗುವಂತೆ ಒಪ್ಪಂದವಾಯಿತು. ಪ್ಯಾಲೆಸ್ಟೀನಿಯನ್ ಪ್ರಾಧಿಕಾರ ೧೯೯೬ ರಲ್ಲಿ ಪ್ಯಾಲೆಸ್ಟಿನಿಯನ್ ಪ್ರಾಧಿಕಾರದ ಅಧ್ಯಕ್ಷರಾಗಿ ಅರಾಫತ್ ಚುನಾಯಿತರಾದರು. ೧೯೯೮ ರ ಸಮಯಕ್ಕೆ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನ ನಡುವಿನ ಸಂಬಂಧ ಮತ್ತಷ್ಟು ಬಿಗಡಾಯಿಸಿತು. ಅಮೆರಿಕದ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರು ಹೊಂದಿಸಿದ ಮಾತುಕತೆಗಳ ನಂತರ ಇಸ್ರೇಲ್ ನ ಪ್ರಧಾನಿ ಎಹುಡ್ ಬರಾಕ್ ಪಶ್ಚಿಮ ದಂಡೆ ಮತ್ತು ಗಾಜಾ ಪಟ್ಟಿಗಳ ಕೆಲ ಭಾಗಗಳನ್ನು ಪ್ಯಾಲೆಸ್ಟೈನ್ ಗೆ ಬಿಟ್ಟುಕೊಡುತ್ತೇನೆಂದು ತಿಳಿಸಿದರು. ಆದರೆ ವಿವಾದಶೀಲ ನಿರ್ಧಾರವೊಂದರಲ್ಲಿ ಅರಾಫತ್ ಇದನ್ನು ನಿರಾಕರಿಸಿದರು. ನಿಧನ ಅಕ್ಟೋಬರ್ ೨೮, ೨೦೦೪ ರಲ್ಲಿ ಅರಾಫತ್ ತೀವ್ರವಾಗಿ ಅಸ್ವಸ್ಥರಾದರು. ಅವರನ್ನು ಪ್ಯಾರಿಸ್ ನಗರದ ಆಸ್ಪತ್ರೆಯೊಂದಕ್ಕೆ ಸಾಗಿಸಲಾಯಿತು. ಇತ್ತೀಚಿನ ಬೆಳವಣಿಗೆಯಲ್ಲಿ ಅರಾಫತ್ ಅವರು ನವೆಂಬರ್ ೧೧ ರಂದು ಮರಣ ಹೊಂದಿದರೆಂಬ ಘೋಷಣೆ ಬಂದಿದೆ. ಉಲ್ಲೇಖಗಳು ಏಷ್ಯಾದ ರಾಜಕೀಯ ಮುಖಂಡರು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತರು ಪ್ಯಾಲೆಸ್ಟೈನ್
1097
https://kn.wikipedia.org/wiki/%E0%B2%AA%E0%B3%82%E0%B2%B0%E0%B3%8D%E0%B2%A3%E0%B2%9A%E0%B2%82%E0%B2%A6%E0%B3%8D%E0%B2%B0%20%E0%B2%A4%E0%B3%87%E0%B2%9C%E0%B2%B8%E0%B3%8D%E0%B2%B5%E0%B2%BF
ಪೂರ್ಣಚಂದ್ರ ತೇಜಸ್ವಿ
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಿನಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. ಜೀವನ ಜನನ ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ. ಅವರ ತಾಯಿ ಹೇಮಾವತಿ. ಇವರು ೧೯೩೮ ಸೆಪ್ಟೆಂಬರ್ ೮ ರಂದು ಶಿವಮೊಗ್ಗ ಜಿಲ್ಲೆಯ ಕುಪ್ಪಳಿಯಲ್ಲಿ ಜನಿಸಿದರು. ಶಿಕ್ಷಣ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದ ನಂತರ, ಮೈಸೂರು ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಎಂ.ಎ. ಪದವಿಯನ್ನು ಪಡೆದರು. ವೃತ್ತಿ-ಪ್ರವೃತ್ತಿ ಇವರ ಮೊದಲ ಕಥೆ ಲಿಂಗ ಬಂದ. ಈ ಕಥೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ ಪಡೆದರು. ಸ್ನಾತಕೋತ್ತರ ಪದವಿಯ ನಂತರ ಓರಗೆ ಇತರೆ ಬರಹಗಾರರಂತೆ ಅಧ್ಯಾಪಕ ವೃತ್ತಿಯನ್ನು ಬಯಸದೆ ಮಲೆನಾಡಿನ ಮೂಡಿಗೆರೆಯಲ್ಲಿ ಕೃಷಿಯನ್ನು ಮಾಡುವ ಮಹತ್ವದ ನಿರ್ಧಾರವನ್ನು ಮಾಡಿದರು. ಕೃಷಿಯ ಜತೆಜತೆಗೆ ಅಗಾದವಾದ ಸಾಹಿತ್ಯದ ಕೃಷಿ ಮಾಡಿದರು. ಸಾಹಿತ್ಯದ ಜೊತೆಗೆ ಇವರಿಗೆ ವ್ಯವಸಾಯ,ಛಾಯಾಚಿತ್ರಗ್ರಹಣ ಹಾಗು ಬೇಟೆಯಲ್ಲಿ ಆಸಕ್ತಿಯಿತ್ತು. ಇವರು ರೈತ ಚಳುವಳಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ವೈವಾಹಿಕ ಬದುಕು ಇವರ ಪತ್ನಿ ರಾಜೇಶ್ವರಿ. ಇವರು ತೇಜಸ್ವಿಯವರ ಪ್ರೀತಿಯ ಮನೆ ಮೂಡಿಗೆರೆಯ 'ನಿರುತ್ತರ'ದಲ್ಲಿ ವಾಸಿಸುತ್ತಿದ್ದರು, ಈಗ ಮರಣಿಸಿದ್ದಾರೆ. ಇವರಿಗೆ ಇಬ್ಬರು ಹೆಣ್ಣು ಮಕ್ಕಳು, ಸುಸ್ಮಿತಾ ಹಾಗು ಈಶಾನ್ಯ. ಇವರಿಬ್ಬರೂ ಸಾಫ್ಟ್ ವೇರ್ ಪರಿಣತರು. ನಿಧನ ಪೂರ್ಣಚಂದ್ರ ತೇಜಸ್ವಿಯವರು ತಮ್ಮ ಮನೆ 'ನಿರುತ್ತರ'ದಲ್ಲಿ ೨೦೦೭ರ ಏಪ್ರಿಲ್ ೫ರ ಮಧ್ಯಾಹ್ನ ೨ ಘಂಟೆಗೆ, ಹೃದಯಾಘಾತದಿಂದ ನಿಧನ ಹೊಂದಿದರು. ಆಗ ಇವರ ವಯಸ್ಸು ೬೯ ವರ್ಷ. ಸಾಹಿತ್ಯ ಕೃಷಿ ಕವಿತೆ, ನಾಟಕ, ಕಾದಂಬರಿ, ಕತೆ ಮೊದಲಾದ ಸಾಹಿತ್ಯ ಪ್ರಕಾರಗಳಲ್ಲಿ ಬರೆದಿದ್ದಾರೆ. ಹಲವಾರು ಆಂಗ್ಲ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ನಾಲ್ಕು ದಶಕಗಳ ಕಾಲ ಕಥೆ, ಕಾದಂಬರಿಗಳ ಮೂಲಕ, ವಿಜ್ಞಾನದ ವಿಸ್ಮಯಗಳ ಮೂಲಕ ತೇಜಸ್ವಿಯವರು ಕನ್ನಡ ಸಾಹಿತ್ಯಕ್ಕೆ ಆನೇಕ ಮಹತ್ವಪೂರ್ಣ ಕೃತಿಗಳನ್ನು ನೀಡಿದ್ದಾರೆ. ಇದರಲ್ಲಿ ಕೀಟಗಳು, ಪ್ರಾಣಿಗಳು, ನದಿ-ಕೊಳ್ಳಗಳು, ಕಾಡುಗಳು, ಬೇಟೆಯ ವೈವಿಧ್ಯತೆಯ ಬಗ್ಗೆ ಹಲವಾರು ಕೃತಿಗಳನ್ನು ನೀಡಿದ್ದಾರೆ. "ಕರ್ವಾಲೋ" ಕೃತಿಯಲ್ಲಿ, ಜೀವವಿಕಾಸ ಪಥದಲ್ಲಿ ಎಲ್ಲವೂ ಬದಲಾಗುತ್ತ ರೂಪಾಂತರ ಹೊಂದುತ್ತಾ ಬಂದಿರುವಾಗ ಹಾರುವ ಓತಿಯ ಕುರಿತು ಕುತೂಹಲ ಹುಟ್ಟಿಸುವ ಸನ್ನಿವೇಶಗಳು ಮೂಡಿ ಬಂದಿವೆ. ಕವನ ಸಂಕಲನ ಸೋಮುವಿನ ಸ್ವಗತ ಲಹರಿ ಮತ್ತು ಇತರ ಕವನಗಳು (೧೯೬೨) ಕಾದಂಬರಿಗಳು ಕರ್ವಾಲೋ (೧೯೮೦) ಚಿದಂಬರ ರಹಸ್ಯ (೧೯೮೫) ಜುಗಾರಿ ಕ್ರಾಸ್ (೧೯೯೪) ಮಾಯಾಲೋಕ (೨೦೦೫) ಕಾಡು ಮತ್ತು ಕ್ರೌರ್ಯ (೨೦೧೩) ನೀಳ್ಗತೆಗಳು ಸ್ವರೂಪ (೧೯೬೬) ನಿಗೂಢ ಮನುಷ್ಯರು (೧೯೭೩) ಕಥಾಸಂಕಲನ ಹುಲಿಯೂರಿನ ಸರಹದ್ದು (೧೯೬೨) ಅಬಚೂರಿನ ಪೋಸ್ಟಾಫೀಸು (೧೯೭೩) ಕಿರಗೂರಿನ ಗಯ್ಯಾಳಿಗಳು (೧೯೯೧) ಪಾಕಕ್ರಾಂತಿ ಮತ್ತು ಇತರ ಕತೆಗಳು ನಾಟಕ ಯಮಳ ಪ್ರಶ್ನೆ (೧೯೬೪) ಆತ್ಮ ಚರಿತ್ರೆ ಅಣ್ಣನ ನೆನಪು. (೧೯೯೬) ಕುವೆಂಪು ಅವರ ಕುರಿತು. ಪ್ರವಾಸ ಕಥನ ಅಲೆಮಾರಿಯ ಅಂಡಮಾನ್ ಹಾಗು ಮಹಾನದಿ ನೈಲ್ (೧೯೯೦) ವಿಮರ್ಶಾ ಕೃತಿಗಳು ವ್ಯಕ್ತಿ ವಿಶಿಷ್ಟ ಸಿಧ್ಧಾಂತ (೧೯೬೪) ವಿಮರ್ಶೆಯ ವಿಮರ್ಶೆ ಹೊಸ ವಿಚಾರಗಳು ವಿಜ್ಞಾನ ಹಾಗೂ ಪರಿಸರ ಕುರಿತ ಕೃತಿಗಳು ಪರಿಸರದ ಕತೆ (೧೯೯೧) ಮಿಸ್ಸಿಂಗ್ ಲಿಂಕ್ (೧೯೯೧) ಸಹಜ ಕೃಷಿ (೧೯೯೨) ಏರೋಪ್ಲೇನ್ ಚಿಟ್ಟೆ ಮತ್ತು ಇತರ ಕಥೆಗಳು (೧೯೯೩) ಹಕ್ಕಿ ಪುಕ್ಕ ಮಿಂಚುಳ್ಳಿ-ಕನ್ನಡ ನಾಡಿನ ಹಕ್ಕಿಗಳು-ಭಾಗ ೧ ಹೆಜ್ಜೆ ಮೂಡದ ಹಾದಿ - ಕನ್ನಡ ನಾಡಿನ ಹಕ್ಕಿಗಳು-ಭಾಗ ೨ ವಿಸ್ಮಯ -೧,೨,೩ (೧೯೯೩) ಫ್ಲೈಯಿಂಗ್ ಸಾಸರ್-ಭಾಗ ೧ ಮತ್ತು ೨ (೧೯೯೩) ನಡೆಯುವ ಕಡ್ಡಿ, ಹಾರುವ ಎಲೆ ಮನಸೋಬು ಪೂಕೋವೋಕ ಅವರ "ಒಂದು ಹುಲ್ಲಿನ ಕ್ರಾಂತಿ " ಪುಸ್ತಕದ ವಿವರಣಾತ್ಮಕ ಕೃತಿ ವೈಜ್ಞಾನಿಕ ಹಾಗೂ ಐತಿಹಾಸಿಕ ಲೇಖನಗಳ ಸಂಕಲನ ಶುಧ್ಧ ಸಾಹಿತ್ಯಿಕ ಮೌಲ್ಯ ಉಳ್ಳ ಕಥೆ ಕಾದಂಬರಿಗಳ ಸಂಗಡ ತೇಜಸ್ವಿಯವರು ಹಲವಾರು ವೈಜ್ಞಾನಿಕ ಮತ್ತು ಐತಿಹಾಸಿಕ ಲೇಖನ ಸಂಕಲನಗಳನ್ನು ಕನ್ನಡಕ್ಕೆ ತಂದಿದ್ದಾರೆ. ಮಹಾಯುಧ್ಧ, ಹಾರುವ ತಟ್ಟೆಗಳು, ಮಹಾನದಿ ನೈಲ್ ಇತ್ಯಾದಿ. ಮಿಲೇನಿಯಮ್ ಸರಣಿ ಹೊಸ ಮಿಲೇನಿಯಮ್‍ನ ಆರಂಭದಲ್ಲಿ ತೇಜಸ್ವಿಯವರು ೨೦ನೇ ಶತಮಾನದಲ್ಲಿ ಜಗತ್ತಿನಲ್ಲಿ ಮೂಡಿಬಂದ ಅತ್ಯುತ್ತಮ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸುವ ಬೃಹತ್ ಯೋಜನೆಯನ್ನು ಹಮ್ಮಿಕೊಂಡರು. ಇದರ ಫಲವೇ ಮಿಲೇನಿಯಮ್ ಕೃತಿ ಶ್ರೇಣಿ. ಈ ಕೃತಿಶ್ರೇಣಿಯಲ್ಲಿ ಒಟ್ಟು ೧೬ ಪುಸ್ತಕಗಳಿವೆ. ಮಿಲೇನಿಯಮ್ ೧ - ಹುಡುಕಾಟ ಮಿಲೇನಿಯಮ್ ೨ - ಜೀವನ ಸಂಗ್ರಾಮ ಮಿಲೇನಿಯಮ್ ೩ - ಪೆಸಿಫಿಕ್ ದ್ವೀಪಗಳು ಮಿಲೇನಿಯಮ್ ೪ - ಚಂದ್ರನ ಚೂರು ಮಿಲೇನಿಯಮ್ ೫- ನೆರೆಹೊರೆಯ ಗೆಳೆಯರು ಮಿಲೇನಿಯಮ್ ೬ - ಮಹಾಯುದ್ಧ - ೧ ಮಿಲೇನಿಯಮ್ ೭ - ಮಹಾಯುದ್ಧ - ೨ ಮಿಲೇನಿಯಮ್ ೮ - ಮಹಾಯುದ್ಧ - ೩ ಮಿಲೇನಿಯಮ್ ೯- ದೇಶವಿದೇಶ - ೧ ಮಿಲೇನಿಯಮ್ ೧೦-ದೇಶವಿದೇಶ - ೨ ಮಿಲೇನಿಯಮ್ ೧೧-ದೇಶವಿದೇಶ - ೩ ಮಿಲೇನಿಯಮ್ ೧೨ - ದೇಶವಿದೇಶ - ೪ ಮಿಲೇನಿಯಮ್ ೧೩ - ವಿಸ್ಮಯ ವಿಶ್ವ - ೧ ಮಿಲೇನಿಯಮ್ ೧೪ - ಮಹಾಪಲಾಯನ ಮಿಲೇನಿಯಮ್ ೧೫ - ವಿಸ್ಮಯ ವಿಶ್ವ - ೨ ಮಿಲೇನಿಯಮ್ ೧೬ - ಅಡ್ವೆಂಚರ್ ಅನುವಾದ ಬೆಳ್ಳಂದೂರಿನ ನರಭಕ್ಷಕ(ಕಾಡಿನ ಕಥೆಗಳು ಭಾಗ ೧) (೧೯೯೩) - ಕೆನೆತ್ ಅಂಡರ್ಸನ್ ಅನುಭವಗಳ ಸಂಗ್ರಹ ರೂಪಾಂತರ ಪೆದ್ದಚೆರುವಿನ ರಾಕ್ಷಸ(ಕಾಡಿನ ಕಥೆಗಳು ಭಾಗ ೨) (೧೯೯೩) - ಕೆನೆತ್ ಅಂಡರ್ಸನ್ ಅನುಭವಗಳ ಸಂಗ್ರಹ ರೂಪಾಂತರ ಜಾಲಹಳ್ಳಿಯ ಕುರ್ಕ(ಕಾಡಿನ ಕಥೆಗಳು ಭಾಗ ೩) (೧೯೯೪) - ಕೆನೆತ್ ಅಂಡರ್ಸನ್ ಅನುಭವಗಳ ಸಂಗ್ರಹ ರೂಪಾಂತರ ಮುನಿಶಾಮಿ ಮತ್ತು ಮಾಗಡಿ ಚಿರತೆ(ಕಾಡಿನ ಕಥೆಗಳು ಭಾಗ ೪) ರುದ್ರಪ್ರಯಾಗದ ಭಯಾನಕ ನರಭಕ್ಷಕ (೧೯೯೫) - ಜಿಮ್ ಕಾರ್ಬೆಟ್‍ರವರ]] 'ಮ್ಯಾನ್ ಈಟಿಂಗ್ ಲೆಪಡ್೯ ಆಫ್ ರುದ್ರಪ್ರಯಾಗ್' ಕೃತಿಯ ಅನುವಾದ. ಪ್ಯಾಪಿಲಾನ್-೧,೨ - ಹೆನ್ರಿ ಷಾರಿಯೇ ರವರ 'Papillon' ಕೃತಿಯ ಅನುವಾದ ಚಿತ್ರ ಸಂಕಲನ ಮಾಯೆಯ ಮುಖಗಳು ಪ್ರಶಸ್ತಿಗಳು ಚಿದಂಬರ ರಹಸ್ಯ ಪತ್ತೇದಾರಿ ವಿಧಾನದ ವಸ್ತು ಹೊಂದಿದ್ದು ಈ ಕಾದಂಬರಿಗೆ ವರ್ಷದ ಉತ್ತಮ ಕೃತಿ ಬಹುಮಾನ ದೊರೆತುದಲ್ಲದೆ, ೧೯೮೭ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಾಪ್ತವಾಯಿತು. ಪಂಪ ಪ್ರಶಸ್ತಿ ೨೦೦೧ ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸಾಹಿತ್ಯ ಅಕಾಡೆಮಿಯೂ ಸಹ ಅದೇ ವರ್ಷ ತೇಜಸ್ವಿ ಅವರಿಗೆ ಗೌರವ ಪ್ರಶಸ್ತಿ ನೀಡಿದೆ. ಪೂರ್ಣಚಂದ್ರ ತೇಜಸ್ವಿ ಅವರು ಬರೆದಿರುವ "ಅಬಚೂರಿನ ಪೋಸ್ಟಾಫೀಸು", "ತಬರನ ಕಥೆ" ಕೃತಿಗಳು ಚಲನಚಿತ್ರಗಳಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿವೆ. ಕುಬಿ ಮತ್ತು ಇಯಾಲ (ಕಥೆ)ಚಿತ್ರವು ರಾಜ್ಯ ಪ್ರಶಸ್ತಿ ಗಳಿಸಿತು. ಕಿರಗೂರಿನ ಗಯ್ಯಾಳಿಗಳು ಕತೆ ಸುಮನ್ ಕಿತ್ತೂರು ಅವರ ನಿರ್ದೇಶನದಲ್ಲಿ ಸಿನೆಮಾ ಆಗಿದೆ. ಚಲನಚಿತ್ರ ಮಾಧ್ಯಮದಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಅಬಚೂರಿನ ಪೋಸ್ಟಾಫೀಸು, ತಬರನ ಕಥೆ, ಕುಬಿ ಮತ್ತು ಇಯಾಲ ಹಾಗೂ ಕಿರಗೂರಿನ ಗಯ್ಯಾಳಿಗಳು ಕೃತಿಗಳು ಚಲನಚಿತ್ರಗಳಾಗಿವೆ. ತೇಜಸ್ವಿ ಬಗ್ಗೆ ನನ್ನ ತೇಜಸ್ವಿ (ಲೇ: ರಾಜೇಶ್ವರಿ ತೇಜಸ್ವಿ) ತೇಜಸ್ವಿ ನಾನು ಕಂಡಷ್ಟು (ಲೇ: ಧನಂಜಯ ಜೀವಾಳ ಬಿ. ಕೆ.) ಮತ್ತೆ ಮತ್ತೆ ತೇಜಸ್ವಿ (ಸಿ.ಡಿ.) ಉಲ್ಲೇಖಗಳು ಹೊರಗಿನ ಸಂಪರ್ಕಗಳು ಪೂರ್ಣಚಂದ್ರ ತೇಜಸ್ವಿ ಕುರಿತ ಅಧಿಕೃತ ಅಂತರ್ಜಾಲ ತಾಣ ಸಂಪದ - ಪೂರ್ಣಚಂದ್ರ ತೇಜಸ್ವಿಯವರ ಸಂದರ್ಶನದ ಆಡಿಯೋ ಪಾಡ್‌ಕ್ಯಾಸ್ಟ್ ಉದಯರವಿ.ಕಾಮ್ - ತೇಜಸ್ವಿಯವರ ಕೃತಿಗಳನ್ನು ಇಲ್ಲಿ ಖರೀದಿಸಬಹುದು ಕನ್ನಡ ಸಾಹಿತಿಗಳು ನವ್ಯ ಸಾಹಿತ್ಯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ೧೯೩೮ ಜನನ ೨೦೦೭ ನಿಧನ ವಿಜ್ಞಾನ ಸಾಹಿತಿಗಳು ಪಂಪ ಪ್ರಶಸ್ತಿ ಪುರಸ್ಕೃತರು ಕಾದಂಬರಿಕಾರರು
1101
https://kn.wikipedia.org/wiki/%E0%B2%B5%E0%B2%BF%E0%B2%A8%E0%B2%BE%E0%B2%AF%E0%B2%95%20%E0%B2%95%E0%B3%83%E0%B2%B7%E0%B3%8D%E0%B2%A3%20%E0%B2%97%E0%B3%8B%E0%B2%95%E0%B2%BE%E0%B2%95
ವಿನಾಯಕ ಕೃಷ್ಣ ಗೋಕಾಕ
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಹಲವು ರೀತಿಯಲ್ಲಿ ಅದೃಷ್ಠವಂತರು. ಅವರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು. ಜೀವನ ತಮ್ಮ ಹಲವು ಸಾಧನೆ, ಸಿದ್ಧಿಗಳಿಂದ ಕನ್ನಡಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯನ್ನೂ, ಗೌರವವನ್ನೂ ತಂದು ಕೊಟ್ಟ ವಿನಾಯಕ ಕೃಷ್ಣ ಗೋಕಾಕರು ೧೯೦೯ರ ಆಗಸ್ಟ್ ೯ರಂದು ಹಾವೇರಿ ಜಿಲ್ಲೆಯ ಸವಣೂರು ಎಂಬಲ್ಲಿ ಜನಿಸಿದರು. ಅವರ ತಂದೆ ಕೃಷ್ಣರಾಯರು ವಕೀಲರಾಗಿದ್ದರು. ವಿನಾಯಕರು ಹುಟ್ಟಿದ ಕಾಲಕ್ಕೆ ಸವಣೂರು ಒಂದು ಪುಟ್ಟ ಸಂಸ್ಥಾನವಾಗಿತ್ತು. ಒಬ್ಬ ನವಾಬನ ಆಡಳಿತಕ್ಕೆ ಒಳಪಟ್ಟಿತ್ತು. ವಿನಾಯಕರ ವಿದ್ಯಾಭ್ಯಾಸ ಸವಣೂರಿನ ಮಜೀದ್ ಸ್ಕೂಲ್ ಮತ್ತು ಧಾರವಾಡಗಳಲ್ಲಿ ನಡೆಯಿತು. ಹೀಗೆ ವಿದ್ಯಾಭ್ಯಾಸದ ಸಲುವಾಗಿ ಧಾರವಾಡ ದಲ್ಲಿದ್ದಾಗಲೇ ಅವರಿಗೆ ಕನ್ನಡದ ವರಕವಿ ಬೇಂದ್ರೆಯವರ ಸಂಪರ್ಕ ಒದಗಿ ಬಂತು. ಗೋಕಾಕರ ಸಾಹಿತ್ಯ ಕೃಷಿ ಬೇಂದ್ರೆಯವರ ಮಾರ್ಗದರ್ಶನ, ಪ್ರೋತ್ಸಾಹಗಳಿಂದ ಮುಂದುವರೆಯಿತು. ಬೇಂದ್ರೆ ತಮ್ಮ ಕಾವ್ಯ ಗುರುವೂ, ಮಾರ್ಗದರ್ಶಕರೂ ಆಗಿದ್ದರೆಂದು ಗೋಕಾಕರೇ ಹೇಳಿಕೊಂಡಿದ್ದಾರೆ. ಇಂಗ್ಲೀಷ್ ವಿಷಯದ ಎಂ.ಎ ಪರೀಕ್ಷೆಯಲ್ಲಿ ಮೊದಲ ದರ್ಜೆಯಲ್ಲಿ ಉತ್ತೀರ್ಣರಾದ ಗೋಕಾಕರು, ಕೂಡಲೇ ಪುಣೆಯ ಸಿ.ಎಸ್.ಪಿ ಕಾಲೇಜಿನಲ್ಲಿ ಉಪನ್ಯಾಸಕ ಹುದ್ದೆಗೆ ಆಯ್ಕೆಯಾದರು. ಅವರು ತಮ್ಮ ವೃತ್ತಿಯಲ್ಲಿ ತಮ್ಮನ್ನು ಪೂರ್ತಿಯಾಗಿ ತೊಡಗಿಸಿಕೊಂಡರು. ಇದರ ಫಲವಾಗಿ ಕನ್ನಡದ ಗಂಡುಮೆಟ್ಟಿನ ನೆಲದ ಈ ಯುವಕ ಮರಾಠಿಗರನ್ನು ಕೂಡ ತಮ್ಮ ಕಡೆ ಸೆಳೆದುಕೊಂಡ. ಇವರ ತರಗತಿಗಳಿಗೆ ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಕೂಡ ಪಾಠ ಕೇಳಲು ಬರುತ್ತಿದ್ದರಂತೆ. ಇವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಫರ್ಗ್ಯೂಸನ್ ಕಾಲೇಜಿನ ಆಡಳಿತ ವರ್ಗವೇ ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು ಇವರನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ಕಳಿಸಿತು. ಗೋಕಾಕರು ಆಕ್ಸ್‌ಫರ್ಡ್‌ನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಓದಿದರು. ಪರೀಕ್ಷೆಯನ್ನು ಮೊದಲ ದರ್ಜೆಯಲ್ಲಿ ಪಾಸು ಮಾಡಿದರು. ಹೀಗೆ ಆಕ್ಸ್‌ಫರ್ಡ್‌ನಲ್ಲಿ ಇಂಗ್ಲೀಷ್ ಸಾಹಿತ್ಯವನ್ನು ಪ್ರಥಮ ದರ್ಜೆಯಲ್ಲಿ ಪಾಸು ಮಾಡಿದ ಮೊದಲ ಭಾರತೀಯ ಎಂಬ ಕೀರ್ತಿಗೆ ಪಾತ್ರರಾದರು. ಇಂಗ್ಲೆಂಡಿನಿಂದ ಹಿಂತಿರುಗಿ ಬಂದವರಿಗೆ ಸಾಂಗ್ಲಿಯ ವಿಲ್ಲಿಂಗ್ಡನ್ ಕಾಲೇಜಿನ ಪ್ರಿನ್ಸಿಪಾಲರ ಹುದ್ದೆ ಕಾದಿತ್ತು. ಅನಂತರ ಕ್ರಮೇಣ ಅವರು ಶಿಕ್ಷಣ ಕ್ಷೇತ್ರದಲ್ಲಿ ಅಧ್ಯಾಪಕನಾದವನೊಬ್ಬನು ಏರಬಹುದಾದ ಅತ್ಯುನ್ನತ ಹುದ್ದೆಯಾದ ಉಪಕುಲಪತಿ ಹುದ್ದೆಗೂ ಏರಿದರು. ಅವರು ಸಾಂಗ್ಲಿಯ ವಿಲ್ಲಿಂಗ್‌ಡನ್ ಕಾಲೇಜು, ಪುಣೆಯ ಫರ್ಗೂಸನ್ ಕಾಲೇಜು, ವೀಸನಗರದ ಕಾಲೇಜು, ಕೊಲ್ಲಾಪುರದ ರಾಜಾರಾಮ ಕಾಲೇಜು, ಧಾರವಾಡದ ಕರ್ನಾಟಕ ಕಾಲೇಜು, ಉಸ್ಮಾನಿಯಾ ವಿಶ್ವವಿದ್ಯಾಲಯ, ಹೈದರಾಬಾದ್ ಹೈದರಾಬಾದಿನಲ್ಲಿರುವ ಇಂಗ್ಲೀಷ್ ಮತ್ತು ವಿದೇಶೀ ಭಾಷೆಗಳ ಕೇಂದ್ರ ಸಂಸ್ಥೆ, ಸಿಮ್ಲಾ ಸಿಮ್ಲಾದಲ್ಲಿರುವ ಉನ್ನತ ಅಧ್ಯಯನ ಸಂಸ್ಥೆ -ಮೊದಲಾದ ಶಿಕ್ಷಣ ಸಂಸ್ಥೆಗಳಲ್ಲಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು. ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಶ್ರೀಸತ್ಯಸಾಯಿ ಉನ್ನತ ಅಧ್ಯಯನ ಸಂಸ್ಥೆಯ ಉಪಕುಲಪತಿಗಳಾಗಿದ್ದರು. ಜಪಾನ್, ಅಮೆರಿಕ, ಇಂಗ್ಲೆಂಡ್, ಬೆಲ್ಜಿಯಂ, ಗ್ರೀಸ್, ಪೂರ್ವ ಆಫ್ರಿಕ ಮೊದಲಾದ ದೇಶಗಳಿಗೆ ಭಾರತದ ಸಾಂಸ್ಕೃತಿಕ ರಾಯಭಾರಿಯಾಗಿ ಹೋಗಿ ಬಂದರು. ತಮ್ಮ ಬದುಕಿನುದ್ದಕ್ಕೂ ಕನ್ನಡದ ಕೀರ್ತಿಪತಾಕೆಗಳನ್ನು ದೇಶದ ಒಳಗೂ ಹೊರಗೂ ಹಾರಿಸಿದ ಗೋಕಾಕರು ೧೯೯೨ರ ಎಪ್ರಿಲ್.೨೮ರಂದು ಬೆಳಗಿನ ಜಾವ ಮುಂಬಯಿಯಲ್ಲಿ ನಿಧನರಾದರು. ಕೃತಿಗಳು ಈ ಶತಮಾನದ ಕನ್ನಡ ಲೇಖಕರಲ್ಲಿ ಅಗ್ರಗಣ್ಯರಾಗಿರುವ ವಿ.ಕೃ. ಗೋಕಾಕರ ಬರಹ ತುಂಬ ವಿಪುಲವೂ, ವ್ಯಾಪಕವೂ ಆದದ್ದು. ಕನ್ನಡ,ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಗೋಕಾಕರು ಹಲವಾರು ಕೃತಿಗಳನ್ನು ರಚಿಸಿದ್ದಾರೆ!. ಇಂಗ್ಲೀಷಿನಲ್ಲಿ ಅವರು ಬರೆದಿರುವ ಕೃತಿಗಳ ಸಂಖ್ಯೆ ಮೂವತ್ತಕ್ಕೂ ಹೆಚ್ಚು. ಅವರ ಮೊದಲ ಪ್ರಕಟಿತ ಕೃತಿ "ಕಲೋಪಾಸಕರು". ಅವರು ಇಂಗ್ಲೆಂಡಿಗೆ ಸಮುದ್ರದ ಮೂಲಕ ಹೋಗಿ ಬಂದ ಅನುಭವಗಳನ್ನು ಆಧರಿಸಿ ರಚಿಸಿದ "ಸಮುದ್ರ ಗೀತೆಗಳು", "ಸಮುದ್ರದಾಚೆಯಿಂದ"- ಇವು ಮಹತ್ವದ ಕೃತಿಗಳಾಗಿವೆ. ಸಮುದ್ರ ಗೀತೆಗಳು ಕವನ ಸಂಕಲನದಲ್ಲಿರುವ ಕೊಡದಿರು ಶರಧಿಗೆ ಷಟ್ಪದಿಯ ದೀಕ್ಷೆಯನು ಎಂಬ ಸಾಲು ತುಂಬ ಪ್ರಸಿದ್ಧವಾಗಿದೆ.ಮುಕ್ತ ಛಂದಸ್ಸು ಮೊದಲ ಬಾರಿ ಬೆಳಕಿಗೆ ತಂದರು.*##(^@€£@) login ಕಾದಂಬರಿಗಳು ಸಮರಸವೇ ಜೀವನ. ಇಜ್ಜೋಡು. ಏರಿಳಿತ. ಸಮುದ್ರಯಾನ. ನಿರ್ವಹಣ ನರಹರಿ. ಕವನ ಸಂಕಲನಗಳು ಕಲೋಪಾಸಕ. ಪಯಣ. ಸಮುದ್ರಗೀತೆಗಳು. ನವ್ಯ ಕವಿಗಳು. ತ್ರಿಶಂಕುವಿನ ಪ್ರಜ್ಞಾ ಪ್ರಭಾತ. ಊರ್ಣನಾಭ. ಉಗಮ. ಬಾಳದೇಗುಲದಲ್ಲಿ. ಸಿಮ್ಲಾಸಿಂಫನಿ. ಇಂದಲ್ಲ ನಾಳೆ(ಚಂಪೂ). ದ್ಯಾವಾಪೃಥಿವೀ. ಪಾರಿಜಾತದಡಿಯಲ್ಲಿ. ಅಭ್ಯುದಯ. ಭಾಗವತ ನಿಮಿಷಗಳು. ಭಾರತ ಸಿಂಧೂರ. ಸಾಹಿತ್ಯ ವಿಮರ್ಶೆ ಕವಿಕಾವ್ಯ ಮಹೋನ್ನತಿ. ನವ್ಯ ಮತ್ತು ಕಾವ್ಯ ಜೀವನ. ಇಂದಿನ ಕನ್ನಡ ಕಾವ್ಯದ ಗೊತ್ತುಗುರಿಗಳು. ಸಾಹಿತ್ಯದಲ್ಲಿ ಪ್ರಗತಿ. ಸಾಹಿತ್ಯ ವಿಮರ್ಶೆಯ ಕೆಲವು ಮೂಲ ತತ್ವಗಳು. ಪ್ರವಾಸ ಕಥನ ಸಮುದ್ರದಾಚೆದಿಂದ. (ಈ ಪ್ರವಾಸ ಕಥನದಿಂದ ಆಯ್ದ "ಲಂಡನ್ ನಗರ" ಎಂಬ ಗದ್ಯವನ್ನು ೧೦ನೇ ತರಗತಿಯ ಪಠ್ಯಪುಸ್ತಕದಲ್ಲಿ ನಮೂದಿಸಲಾಗಿದೆ.) ಪಯಣಿಗ. ಸಂತೋಷ ಗೌರವಗಳು, ಪ್ರಶಸ್ತಿಗಳು ಹಾಗೂ ಬಿರುದುಗಳು ಗೋಕಾಕರು ಸಾಹಿತ್ಯ-ಸಂಸ್ಕೃತಿಗೆ ಸಲ್ಲಿಸಿದ ಸೇವೆಯನ್ನು ಗಮನಿಸಿ ಜನತೆಯೂ, ಸರ್ಕಾರವೂ ಅವರಿಗೆ ಪ್ರಶಸ್ತಿ ಗೌರವಗಳನ್ನು ನೀಡಿ ಸನ್ಮಾನಿಸಿವೆ. ಬಳ್ಳಾರಿಯಲ್ಲಿ ೧೯೫೮ರಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು. ೧೯೬೭ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ೧೯೭೯ರಲ್ಲಿ ಕ್ಯಾಲಿಫೋರ್ನಿಯಾದ ಫೆಸಿಫಿಕ್ ವಿಶ್ವವಿದ್ಯಾಲಯಗಳು ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿವೆ. ಕೇಂದ್ರ ಸರ್ಕಾರ ೧೯೬೧ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿದೆ. ಹಂಪಿ ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್ ಪದವಿ೧೯೬೫. ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪದವಿ ಮತ್ತು ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಪದವಿ ಇವೆರಡೂ ಕನ್ನಡಿಗರೊಬ್ಬರಿಗೆ ಮೊದಲ ಬಾರಿಗೆ ಸಂದ ಗೌರವಗಳಾಗಿವೆ. ಅವರ ಮೇರು ಕೃತಿ "ಭಾರತ ಸಿಂಧು ರಶ್ಮಿ"ಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಭಾರತೀಯ ವಿದ್ಯಾಭವನದ ರಾಜಾಜಿ ಪ್ರಶಸ್ತಿ ಮತ್ತು ಐ.ಬಿ.ಎಚ್. ಪ್ರಶಸ್ತಿಗಳೂ ದೊರಕಿವೆ. ಗೋಕಾಕರ "ದ್ಯಾವಾ ಪೃಥಿವೀ" ಕವನ ಸಂಕಲನಕ್ಕೆ ೧೯೬೦ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಬಂದಿತು. ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡುವಾಗ ಪ್ರಶಸ್ತಿ ಆಯ್ಕೆ ಸಮಿತಿ ಅವರ ಯಾವುದೇ ಕೃತಿಯನ್ನು ಹೆಸರಿಸಲಿಲ್ಲ. ಕನ್ನಡ ಸಾಹಿತ್ಯ ಲೋಕಕ್ಕೆ ಅವರು ೧೯೬೯ರಿಂದ ೧೯೮೪ರ ಅವಧಿಯಲ್ಲಿ ನೀಡಿದ ಅನುಪಮ ಕೊಡುಗೆಯನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಹೇಳಿದೆ. ಯಾವುದೇ ಕೃತಿಯನ್ನು ಹೆಸರಿಸದೆ ಜ್ಞಾನಪೀಠ ಪ್ರಶಸ್ತಿ ಕೊಟ್ಟಿದ್ದು ಇದೇ ಮೊದಲು. ಆದರೆ ಬಹಳ ಜನರು ಗೋಕಾಕರಿಗೆ ಅವರ ಮೇರು ಕೃತಿ "ಭಾರತ ಸಿಂಧು ರಶ್ಮಿ"ಗಾಗಿಯೇ ಈ ಪ್ರಶಸ್ತಿ ಬಂದಿದೆ ಎಂದು ಭಾವಿಸಿದ್ದಾರೆ. ಸಾಮಾನ್ಯವಾಗಿ ಜ್ಞಾನಪೀಠ ಪ್ರಶಸ್ತಿಯನ್ನು ದೆಹಲಿಯಲ್ಲಿ ನೀಡಲಾಗುತ್ತದೆ. ಆದರೆ ಗೋಕಾಕರಿಗೆ ಪ್ರಶಸ್ತಿಯನ್ನು ನೀಡಲು ಸ್ವತಃ ಈ ದೇಶದ ಪ್ರಧಾನಿ ಮಂತ್ರಿಗಳೇ ಮುಂಬಯಿಗೆ ಆಗಮಿಸಿದರು. ಇದು ಗೋಕಾಕರು ಎಷ್ಟು ಮಹತ್ವದ ವ್ಯಕ್ತಿ ಎಂಬುದಕ್ಕೆ ಒಂದು ನಿದರ್ಶನ. ಗೋಕಾಕ್ ವರದಿ ತಮ್ಮ ಪಾಂಡಿತ್ಯದಿಂದಾಗಿ ಸಾಹಿತ್ಯ ಲೋಕದಲ್ಲಿ ಜನಪ್ರಿಯರಾಗಿದ್ದ ಗೋಕಾಕರಿಗೆ ಶ್ರೀಸಾಮಾನ್ಯರ, ಅನಕ್ಷರಸ್ಥರ ವಲಯದಲ್ಲೂ ಜನಪ್ರಿಯರಾಗುವ ಒಂದು ಸುಯೋಗ ಒದಗಿ ಬಂತು. ಕರ್ನಾಟಕ ಸರ್ಕಾರ ೧೯೮೦ರಲ್ಲಿ ಪ್ರೌಢಶಾಲಾ ವ್ಯಾಸಂಗದಲ್ಲಿ ಭಾಷೆಗಳ ಸ್ಥಾನಮಾನ ಕುರಿತು ವರದಿ ನೀಡಲು ವಿ.ಕೃ. ಗೋಕಾಕರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿತು. ಈ ಸಮಿತಿ ನೀಡಿದ ವರದಿ ಕನ್ನಡದ ಪರವಾಗಿತ್ತು. ಸರ್ಕಾರ ಈ ವರದಿಯನ್ನು ಅಂಗೀಕರಿಸಲು ಹಿಂದೆ ಮುಂದೆ ನೋಡಿತು. ಕನ್ನಡ ಜನತೆ ಮೊದಲ ಬಾರಿಗೆ ಒಕ್ಕೊರಲಿನಿಂದ ಗೋಕಾಕ್ ವರದಿ ಜಾರಿಗೆ ಬರಲಿ ಎಂದು ಸರ್ಕಾರವನ್ನು ಒತ್ತಾಯಿಸಿತು. ಈ ಸಂದರ್ಭದಲ್ಲಿ ನಡೆದ ಕನ್ನಡ ಚಳವಳಿ ಒಂದು ಐತಿಹಾಸಿಕ ದಾಖಲೆಯಾಗಿದೆ. ಕರ್ನಾಟಕದಲ್ಲಿ ಈ ಪ್ರಮಾಣದ ಚಳವಳಿ ಹಿಂದೆಂದೂ ನಡೆದಿರಲಿಲ್ಲ. ಸ್ವಾತಂತ್ರ್ಯ ಹೋರಾಟವಾಗಲೀ, ಕರ್ನಾಟಕ ಏಕೀಕರಣ ಚಳವಳಿಯಾಗಲೀ ಕರ್ನಾಟಕದಲ್ಲಿ ಈ ಪ್ರಮಾಣದಲ್ಲಿ ನಡೆದಿರಲಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಇದು ಇತಿಹಾಸದಲ್ಲಿ "ಗೋಕಾಕ್ ಚಳವಳಿ" ಎಂದೇ ದಾಖಲಾಗಿದೆ. ಈಗ ಇದರ ಫಲವಾಗಿ ಕರ್ನಾಟಕದ ಕನ್ನಡೇತರ ಶಾಲೆಗಳಲ್ಲೂ ಮೂರನೆಯ ತರಗತಿಯಿಂದ ಹತ್ತನೆಯ ತರಗತಿಯವರೆಗೂ ಒಂದು ಭಾಷೆಯಾಗಿ ಕನ್ನಡವನ್ನು ಕಡ್ಡಾಯವಾಗಿ ಓದಬೇಕಾಗಿದೆ. ಗೋಕಾಕ್ ಚಳವಳಿ ಕನ್ನಡಿಗರಲ್ಲಿ ಎಚ್ಚರವನ್ನು ಮೂಡಿಸಿದೆ. ಅಂದಿನಿಂದ ಕನ್ನಡಿಗರು ತಮ್ಮ ನಾಡು, ನುಡಿ ಹಾಗೂ ನೀರಿನ ಬಗ್ಗೆ ಸ್ವಲ್ಪ ಮಟ್ಟಿಗೆ ಜಾಗೃತರಾಗಿದ್ದಾರೆ. ಗೋಕಾಕರೇ ಸ್ವತಃ ಅನೇಕ ಕನ್ನಡ ಪರ ಚಳವಳಿಗಳಲ್ಲಿ ಭಾಗವಹಿಸಿ ಜನರನ್ನು ಎಚ್ಚರಿಸಿದ್ದಾರೆ. ಅವರು ಅನೇಕ ಕನ್ನಡಪರ ನಿಯೋಗಗಳ ನಾಯಕತ್ವವನ್ನು ವಹಿಸಿ ಸರ್ಕಾರವನ್ನೂ ಎಚ್ಚರಿಸಿದ್ದಾರೆ. ಇದು ಗೋಕಾಕರ ಕನ್ನಡ ಪ್ರೀತಿಗೆ ನಿದರ್ಶನವಾಗಿದೆ. ಗೋಕಾಕ್ ಅವರು ತಮ್ಮ ಬರಹ, ಬೋಧನೆಗಳಿಂದ ಕನ್ನಡದ ಗೌರವವನ್ನು ಹೆಚ್ಚಿಸಿದರು. ಹಾಗೆಯೇ "ಗೋಕಾಕ್ ವರದಿ"ಯಲ್ಲಿ ಕನ್ನಡಕ್ಕೆ ಶಾಲಾ ಶಿಕ್ಷಣದಲ್ಲಿ ಸಲ್ಲಬೇಕಾದ ನ್ಯಾಯಯುತ ಸ್ಥಾನವನ್ನು ದೊರಕಿಸಿಕೊಟ್ಟರು. ಈ ಎರಡೂ ಕೆಲಸಗಳಿಗಾಗಿ ಕನ್ನಡ ಜನತೆ ಗೋಕಾಕರನ್ನು ಸದಾ ಗೌರವ, ಕೃತಜ್ಞತೆಗಳಿಂದ ನೆನೆಯುತ್ತದೆ. ಉಲ್ಲೇಖಗಳು ಬಾಹ್ಯ ಸಂಪರ್ಕಗಳು. ಜನನಾಯಕ ( ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾ ತಾಣದಲ್ಲಿ ಓದಲು ಲಭ್ಯ ಇರುವ ಗೋಕಾಕರ ಜನಪ್ರಿಯ ನಾಟಕ) ಗೋಕಾಕ್ ವರದಿ ಸಮುದ್ರಗೀತೆಗಳ ಅಲೆಯಲ್ಲಿ ಭಾರತ ಸಿಂಧು ರಶ್ಮಿಯಾಗಿ ಕಂಗೊಳಿಸಿದ ಗೋಕಾಕ್ Na Kanda Gokak - By Jeevi Kulkarni ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಕನ್ನಡ ಕವಿಗಳು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು
1104
https://kn.wikipedia.org/wiki/%E0%B2%B6%E0%B2%BF%E0%B2%B5%E0%B2%B0%E0%B2%BE%E0%B2%AE%20%E0%B2%95%E0%B2%BE%E0%B2%B0%E0%B2%82%E0%B2%A4
ಶಿವರಾಮ ಕಾರಂತ
ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ. ಜೀವನ ಜ್ಞಾನಪೀಠ ಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ ಕಮ್ಮಿಯಾಗಿ ಬಾಳಿ, ತಮ್ಮ ಜೀವಿತಾವಧಿಯಲ್ಲಿ ಸುಮಾರು ೪೨೭ ಪುಸ್ತಕಗಳನ್ನು ರಚಿಸಿದರು. ಅವುಗಳಲ್ಲಿ ಕಾದಂಬರಿಗಳು ೪೭. ತಮ್ಮ ೯೬ನೆಯ ವಯಸ್ಸಿನಲ್ಲೂ ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿರುವ ಒಂದು ಸಾಧನೆ ಎನ್ನಬಹುದು. ಸಾಹಿತಿಯಾಗಿ ಶಿವರಾಮ ಕಾರಂತರು ಪ್ರಸಿದ್ಧಿಯಾಗಿರುವಂತೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದವರು. ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಗಳನ್ನು ಮಾಡಿದ್ದರು. ತಾವೇ ಸ್ವತಃ ನೃತ್ಯವನ್ನು ಕಲಿತು, ಬ್ಯಾಲೆಯಲ್ಲೂ ಗಂಭೀರ ಪ್ರಯೋಗ ಮತ್ತು ಪ್ರಯತ್ನ ಮಾಡಿದ್ದರು. ಯುವಕರಾಗಿದ್ದಾಗ, ಸಮಾಜ ಸುಧಾರಣೆಗೂ ಕೈ ಹಾಕಿ, ವೇಶ್ಯಾ ವಿವಾಹಗಳನ್ನು ಮಾಡಿಸಿದ್ದರು! ಯಕ್ಷಗಾನ ತಂಡಗಳನ್ನು ಕಟ್ಟಿಕೊಂಡು ದೇಶ ವಿದೇಶಗಳಲ್ಲಿ ಈ ಕಲೆಯನ್ನು ಪ್ರಚುರಪಡಿಸಲು ಯತ್ನಿಸಿದರು. ಮಕ್ಕಳಲ್ಲಿದ್ದ ಪ್ರತಿಭೆ ಅರಳಿಸಲು ಪುತ್ತೂರಿನಲ್ಲಿ ಬಾಲವನ ಎಂಬ ಅಸಂಪ್ರದಾಯಿಕ ಶೈಕ್ಷಣಿಕ ಕೇಂದ್ರವನ್ನು ತೆರೆದಿದ್ದರು. ಪುತ್ತೂರಿನಲ್ಲಿ ಒಂದು ಮುದ್ರಣಾಲಯ ತೆರೆದು, ತಮ್ಮ ಪುಸ್ತಕಗಳನ್ನು ಮುದ್ರಿಸುತ್ತಿದ್ದರಲ್ಲದೆ, ತಮ್ಮ ಹಲವು ಕಾದಂಬರಿಗಳಿಗೆ ತಾವೇ ಮುಖಪುಟದ ಚಿತ್ರಗಳನ್ನೂ ಬರೆದು ಮುದ್ರಿಸಿದ ಬಹುಮುಖ ಪ್ರತಿಭೆ ಇವರದ್ದು! ಬಹುಶಃ ಮುಖಪುಟ ಚಿತ್ರ ಬರೆದು ಪ್ರಕಟಿಸಿದ ಕನ್ನಡದ ಪ್ರಥಮ ಪ್ರಮುಖ ಸಾಹಿತಿ ಇವರೊಬ್ಬರೇ. ನಿರಂತರ ಪ್ರಯೋಗಶೀಲರಾಗಿದ್ದ ಕೋಟ ಶಿವರಾಮ ಕಾರಂತ ಅವರು ಕನ್ನಡ ಚಿತ್ರರಂಗದಲ್ಲಿ ಕೂಡ ತಮ್ಮ ಪ್ರಯೋಗವನ್ನು ಆರಂಭ ಮಾಡಿದ್ದು. ಮೂಕಿ ಚಿತ್ರ ನಿರ್ಮಾಣಕ್ಕೆ ಕೈಹಾಕುವ ಮೂಲಕ. ಹರಿಜನರ ಬದುಕನ್ನು ಆಧರಿಸಿದ್ದ ಡೊಮಿಂಗೋ (೧೯೩೦) ಚಿತ್ರವನ್ನು ತಾವೇ ಚಿತ್ರೀಕರಿಸಿ, ಅಭಿನಯಿಸಿ ನಿರ್ದೇಶಿಸಿದ್ದರು. ಅನಂತರ ಭೂತರಾಜ್ಯ (೧೯೩೧) ಎಂಬ ಮೂಕಿ ಚಿತ್ರಗಳನ್ನು ಸಹ ನಿರ್ಮಿಸಿದರು. ಪರಿಸರ ಹೋರಾಟ ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ "ಕಾರಂತಜ್ಜ" ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು. ಸಾಲಿಗ್ರಾಮದಲ್ಲಿ ಸ್ಮಾರಕ ಡಾ. ಕಾರಂತರ ಹುಟ್ಟೂರಾದ ಸಾಲಿಗ್ರಾಮದಲ್ಲಿ (ಉಡುಪಿ ಜಿಲ್ಲೆ), ಕಾರಂತ ಸ್ಮೃತಿಚಿತ್ರ ಶಾಲೆ ಎಂಬ ಸುಂದರ ಬಹುಮಹಡಿ ಕಟ್ಟಡದಲ್ಲಿ, ಕಾರಂತರ ಕುರಿತಾದ ಹಲವಾರು ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ. ಅವರ ಕಾದಂಬರಿಗಳ ಆಶಯದ ದೊಡ್ಡ ದೊಡ್ಡ ಭಿತ್ತಿ ಚಿತ್ರಗಳು, ಯಕ್ಷಗಾನದ ದಿರಿಸುಗಳು, ಕಾದಂಬರಿಗಳ ಹಳೆಯ ಪ್ರತಿಗಳು, ಕಾರಂತರು ಬರೆದ ಚಿತ್ರಗಳು, ಅವರು ಉಪಯೋಗಿಸುತ್ತಿದ್ದ ಲೇಖನಿ ಮತ್ತಿತರ ವಸ್ತುಗಳನ್ನೊಂಡ ಸುಂದರ ವಸ್ತು ಸಂಗ್ರಹಾಲಯ ಇದು. ಸಾಲಿಗ್ರಾಮದ ಪೇಟೆಯಲ್ಲಿ ಹೆದ್ದಾರಿಯ ಬದಿಯಲ್ಲೇ ಇರುವ ಈ ಕಟ್ಟಡವನ್ನು ಕಂಡರೆ, ಕಾರಂತರ ಬಗ್ಗೆ ಅಭಿಮಾನ ಉಕ್ಕುತ್ತದೆ. ಮಾಲಿನಿಮಲ್ಯ ಅವರು ನೋಡಿಕೊಳ್ಳುತ್ತಿರುವ ಈ ಸಂಗ್ರಹಾಲಯವನ್ನು ನೋಡಲು ಸದಾ ಅವಕಾಶವಿದೆ. ಬಾಲ್ಯ,ವಿದ್ಯಾಭ್ಯಾಸ ಕಡಲ ತೀರದ ಭಾರ್ಗವ ಎಂದು ಪ್ರಖ್ಯಾತಿಯನ್ನು ಪಡೆದ ಶಿವರಾಮ ಕಾರಂತರು ಉಡುಪಿ ಜಿಲ್ಲೆಯ ಕೋಟ ಎಂಬಲ್ಲಿ ೧೯೦೨ರ ಅಕ್ಟೋಬರ್ ೧೦ರಂದು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಇವರ ತಂದೆ ಶೇಷ ಕಾರಂತರು ,ತಾಯಿ ಲಕ್ಶ್ಮೀ ಕಾರಂತರು. ೯ ಮಕ್ಕಳ ಕುಟುಂಬದಲ್ಲಿ ಶಿವರಾಮ ಕಾರಂತರು ೪ನೇಯ ಮಗ. ಶಿವರಾಮ ಕಾರಂತರ ಅಣ್ಣ ಮದರಾಸ ಸರಕಾರದಲ್ಲಿ ಸಚಿವರಾಗಿದ್ದರು. ಇನ್ನೊಬ್ಬ ಅಣ್ಣ ವಾಸುದೇವ ಕಾರಂತರು ಲೇಖಕರೂ ,ಆದ್ಯಾತ್ಮ ವಿಷಯಗಳಲ್ಲಿ ಪ್ರಸಿದ್ಧಿಯನ್ನು ಪಡೆದಿದಾರೆ. ಶೇಷ ಕಾರಂತರು ಶಾಲಾ ಶಿಕ್ಷಕರಾಗಿದ್ದು ದೊಡ್ದ ಕುಟುಂಬವನ್ನು ಸಾಕಲು ಅಸಾಧ್ಯವಾದಾಗ ಕೆಲಸ ಬಿಟ್ಟು ಜವಳಿ ಅಂಗಡಿ ಆರಂಭಿಸಿದರು.ಇಂಗ್ಲೀಷರನ್ನು ಕಂಡರೆ ಅಸಹ್ಯಪಡುತಿದ್ದ ಕಾಲದಲ್ಲಿ ಶೇಷರು ಅವರ ಮಕ್ಕಳನ್ನು ಇಂಗ್ಲೀಷ್ ಶಾಲೆಗೆ ಕಳುಹಿಸಿದರು. ಕುಂದಾಪುರದ ಶಾಲೆಯಲ್ಲಿ ೧೯೨೦ ರಲ್ಲಿ ಶಿವರಾಮ ಕಾರಂತರು ತಮ್ಮ ಎಸ್.ಎಸ್.ಎಲ್.ಸಿ ಪರೀಕ್ಶೆಯನ್ನು ಬರೆದು ಮುಗಿಸಿದರು. ತಮ್ಮ ಶಾಲೆಯಲ್ಲಿ ರಂಗರಾಯರು ಕಾರಂತರ ಮೊದಲ ಗುರುಗಳಾಗಿ ಕಾರಂತರಿಗೆ ಬೆಂಬಲ ನೀಡಿದರು. ಮುದ್ದಣ ಕವಿಯ ಗುರುವಾಗಿದ್ದ ಮಳಲಿ ಸುಬ್ಬರಾಯರು ಸಹ ಶಿವರಾಮ ಕಾರಂತರಿಗೆ ಗುರುವಾಗಿದ್ದರು. ಮಳಲಿ ಸುಬ್ಬರಾಯರು ಮೂಲತ: ಯಕ್ಷಗಾನ ರಚನೆ ಮಾಡಬಲ್ಲವರಾಗಿದ್ದು ಯಕ್ಷಗಾನದ ಬಗ್ಗೆ ಶಿವರಾಮರಿಗೆ ಆಸಕ್ತಿ ಮೂಡಲು ಮುಖ್ಯ ಕಾರಣರಾದರು. ಶಿವರಾಮ ಕಾರಂತರಿಗೆ ಪರಿಸರವೆಂದರೆ ಬಹಳ ಪ್ರೀತಿ. ಅವರು ಬಾಲ್ಯದಲ್ಲಿ ಕೆರೆಗಳನ್ನು ಏರಿ,ಸಮುದ್ರತೀರ,ಮರದ ನೆರಳಿನ ಪ್ರದೇಶಗಳಲ್ಲಿ ಸಮಯವನ್ನು ಕಳೆಯುತ್ತಿದ್ದರು. ಆಧುನಿಕ ವಿದ್ಯಾಭ್ಯಾಸ ಕೇವಲ ಹೊಟ್ಟೆಪಾಡಿಗಾಗಿ ಎನ್ನುವುದು ಅವರ ಅಭಿಪ್ರಾಯ. ನಿಜವಾದ ವ್ಯಕ್ತಿತ್ವದ ವಿಕಸನವಾದರೆ ಅದೇ ನಿಜವಾದ ಶಿಕ್ಷಣವೆನ್ನುವುದು ಅವರ ಅಭಿಪ್ರಾಯವಾಗಿತ್ತು. ೧೯೨೦ರಲ್ಲಿ ಗಾಂಧೀಜಿಯವರು ಸ್ವತಂತ್ರ ಹೋರಾಟದಲ್ಲಿ ಶಾಲಾ ಮಕ್ಕಳು ಬಾಗವಹಿಸಬೇಕೆಂದು ಕರೆಕೊಟ್ಟಾಗ ಕಾರಂತರೂ ಚಳವಳಿಯಲ್ಲಿ ಭಾಗವಹಿಸಿದ್ದರು. ಕಾರಂತರು ಅಪ್ಪ ಹಾಕಿದ ಆಲದ ಮರಕ್ಕೆ ಎಂದೂ ಜೋತು ಬಿದ್ದವರಲ್ಲ. ಅವರ ಇಡೀ ಬದುಕು ಹಲವಾರು ಪ್ರಯೋಗಗಳಿಂದ ಕೂಡಿದೆ. ಅನುಭವ ಬೆಳೆದಂತೆಲ್ಲ ಅವರು ಹಲವು ಬಾರಿ ತಮ್ಮ ಹಿಂದಿನ ನಿಲುವುಗಳನ್ನು ಬದಲಾಯಿಸಿಕೊಂಡಿದ್ದಾರೆ. ಮನುಷ್ಯ ಎಷ್ಟು ಕಲಿತರೂ ಕಲಿಯಬೇಕಾದದ್ದೇ ಬಹಳ ಎಂದು ನಂಬಿರುವ ಕಾರಂತರಿಗೆ ಈ ಬದುಕೇ ಒಂದು ಪಾಠಶಾಲೆಯಾಗಿದೆ. ಚಿಕ್ಕಂದಿನಲ್ಲೇ ಶಾಲೆ ಬಿಟ್ಟು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಅವರು ಮುಂದೆ ಎಲ್ಲ ಜ್ಞಾನಶಾಖೆಗಳಲ್ಲೂ ಆಸಕ್ತಿ ಬೆಳೆಸಿಕೊಂಡದ್ದು, ಸ್ವಂತವಾಗಿ ಕಲಿತದ್ದು, ಕಲಿತದ್ದನ್ನು ಸರಳವಾದ ಕನ್ನಡದಲ್ಲಿ ಮಾತನಾಡಿದ್ದು, ಬರೆದದ್ದು ಈಗ ದಾಖಲೆಯಾಗಿದೆ. ಸಹಜವಾಗಿಯೇ ಅವರಿಗೆ ಹಲವಾರು ವಿಶ್ವವಿದ್ಯಾಲಯಗಳ ಗೌರವ ಡಾಕ್ಟರೇಟುಗಳು, ಜ್ಞಾನಪೀಠ ಪ್ರಶಸ್ತಿಯೂ ಸೇರಿದಂತೆ ಹಲವು ಹತ್ತು ಪ್ರಶಸ್ತಿಗಳು ಲಭ್ಯವಾಗಿವೆ. ಅಸಂಖ್ಯ ಗೋಷ್ಠಿಗಳ ,ಸಮ್ಮೇಳನಗಳ ಅಧ್ಯಕ್ಷ ಪಟ್ಟಗಳು, ಸನ್ಮಾನಗಳು ಕಾರಂತರನ್ನು ಹುಡುಕಿಕೊಂಡು ಬಂದೆವೆ. ತುರ್ತುಪರಿಸ್ಥಿತಿಯಲ್ಲಿ ಇಂದಿರಾ ಸರ್ವಾಧಿಕಾರವನ್ನು ಧಿಕ್ಕರಿಸಿ ಕಾರಂತರು ಪದ್ಮಭೂಷಣ ಪ್ರಶಸ್ತಿಯನ್ನು ಕೇಂದ್ರ ಸರಕಾರಕ್ಕೆ ವಾಪಸು ಮಾಡಿದ್ದು ಕೂಡ ಇತಿಹಾಸದಲ್ಲಿ ಸೇರಿಹೋಗಿದೆ. ಸಾಹಿತ್ಯ, ರಂಗಭೂಮಿ, ಚಲನಚಿತ್ರ, ವಿಜ್ಞಾನ, ಚಿತ್ರಕಲೆ, ಸಂಗೀತ, ಶಿಕ್ಷಣ, ರಾಜಕೀಯ, ಪತ್ರಿಕೋದ್ಯಮ, ಭಾಷೆ, ಸಂಸ್ಕøತಿ ಹೀಗೆ ಪಟ್ಟಿ ಬೆಳೆಯುತ್ತದೆ. ಕಾರಂತರು ‘ ಬಾಲ ಪ್ರಪಂಚ’, ‘ವಿಜ್ಞಾನ ಪ್ರಪಂಚ’ಗಳನ್ನು ಬರೆದಿದ್ದಾರೆ. ಸಿರಿಗನ್ನಡ ಅರ್ಥಕೋಶವನ್ನು ತಯಾರಿಸಿದ್ದಾರೆ. ಯಕ್ಷಗಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಸ್ವತಃ ಹಲವು ಪ್ರಯೋಗಗಳನ್ನು ಮಾಡಿದ್ದಾರೆ. ಶಿಲ್ಪಕಲೆ, ಚಿತ್ರಕಲೆ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ, ಸ್ವತಃ ಚಿತ್ರಗಳನ್ನು ಬರೆದಿದ್ದಾರೆ. ಚಲನಚಿತ್ರ ನಿರ್ಮಿಸಿದ್ದಾರೆ. ಐವತ್ತಕ್ಕೂ ಹೆಚ್ಚು ನಾಟಕಗಳನ್ನು ಬರೆದಿದ್ದಾರೆ. ಕೃತಿಗಳು ಕವನ ಸಂಕಲನಗಳು ರಾಷ್ಟ್ರಗೀತ ಸುಧಾಕರ ಸೀಳ್ಗವನಗಳು ಕಾದಂಬರಿಗಳು ಅದೇ ಊರು, ಅದೆ ಮರ ಅಳಿದ ಮೇಲೆ ಅಂಟಿದ ಅಪರಂಜಿ ಆಳ, ನಿರಾಳ ಇದ್ದರೂ ಚಿಂತೆ ಇನ್ನೊಂದೇ ದಾರಿ ಇಳೆಯೆಂಬ ಉಕ್ಕಿದ ನೊರೆ ಒಡಹುಟ್ಟಿದವರು ಒಂಟಿ ದನಿ ಔದಾರ್ಯದ ಉರುಳಲ್ಲಿ ಕಣ್ಣಿದ್ದೂ ಕಾಣರು ಕನ್ನಡಿಯಲ್ಲಿ ಕಂಡಾತ ಕನ್ಯಾಬಲಿ ಕರುಳಿನ ಕರೆ ಕೇವಲ ಮನುಷ್ಯರು ಗೆದ್ದ ದೊಡ್ಡಸ್ತಿಕೆ ಗೊಂಡಾರಣ್ಯ ಜಗದೋದ್ಧಾರ ನಾ ಜಾರುವ ದಾರಿಯಲ್ಲಿ ದೇವದೂತರು ಧರ್ಮರಾಯನ ಸಂಸಾರ ನಷ್ಟ ದಿಗ್ಗಜಗಳು ನಂಬಿದವರ ನಾಕ, ನರಕ ನಾವು ಕಟ್ಟಿದ ಸ್ವರ್ಗ ನಿರ್ಭಾಗ್ಯ ಜನ್ಮ ಬತ್ತದ ತೊರೆ ಭೂತ ಮರಳಿ ಮಣ್ಣಿಗೆ ಮುಗಿದ ಯುದ್ಧ ಮೂಜನ್ಮ ಮೈ ಮನಗಳ ಸುಳಿಯಲ್ಲಿ ಮೊಗ ಪಡೆದ ಮನ ವಿಚಿತ್ರ ಕೂಟ ಶನೀಶ್ವರನ ನೆರಳಿನಲ್ಲಿ ಸನ್ಯಾಸಿಯ ಬದುಕು ಸಮೀಕ್ಷೆ ಸರಸಮ್ಮನ ಸಮಾಧಿ ಸ್ವಪ್ನದ ಹೊಳೆ ಹೆತ್ತಳಾ ತಾಯಿ ಚಲನಚಿತ್ರವಾಗಿರುವ ಕಾದಂಬರಿಗಳು ಕುಡಿಯರ ಕೂಸು (ಚಲನಚಿತ್ರವಾಗಿದೆ) ಚಿಗುರಿದ ಕನಸು(ಚಲನಚಿತ್ರವಾಗಿದೆ) ಚೋಮನ ದುಡಿ(ಚಲನಚಿತ್ರವಾಗಿದೆ) ಬೆಟ್ಟದ ಜೀವ(ಚಲನಚಿತ್ರವಾಗಿದೆ) ಮೂಕಜ್ಜಿಯ ಕನಸುಗಳುಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ನಾಟಕ ಅವಳಿ ನಾಟಕಗಳು ಏಕಾಂಕ ನಾಟಕಗಳು ಐದು ನಾಟಕಗಳು ಕಟ್ಟೆ ಪುರಾಣ ಕಠಾರಿ ಭೈರವ ಕರ್ಣಾರ್ಜುನ ಕೀಚಕ ಸೈರಂಧ್ರಿ ಗರ್ಭಗುಡಿ ಗೀತ ನಾಟಕಗಳು ಜಂಬದ ಜಾನಕಿ ಜ್ಯೂಲಿಯಸ್ ಸೀಸರ್ ಡುಮಿಂಗೊ ದೃಷ್ಟಿ ಸಂಗಮ ನವೀನ ನಾಟಕಗಳು ನಾರದ ಗರ್ವಭಂಗ ಬಿತ್ತಿದ ಬೆಳೆ ಬೆವರಿಗೆ ಜಯವಾಗಲಿ ಬೌದ್ಧ ಯಾತ್ರಾ ಮಂಗಳಾರತಿ ಮುಕ್ತದ್ವಾರ ಯಾರೊ ಅಂದರು ವಿಜಯ ವಿಜಯ ದಶಮಿ ಸರಳ ವಿರಳ ನಾಟಕಗಳು ಸಾವಿರ ಮಿಲಿಯ ಹಣೆ ಬರಹ ಹಿರಿಯಕ್ಕನ ಚಾಳಿ ಹೇಗಾದರೇನು? ಹೇಮಂತ ಸಣ್ಣ ಕತೆ ಕವಿಕರ್ಮ ತೆರೆಯ ಮರೆಯಲ್ಲಿ ಹಸಿವು ಹಾವು ಹರಟೆ/ವಿಡಂಬನೆ ಗ್ನಾನ ಚಿಕ್ಕ ದೊಡ್ಡವರು ದೇಹಜ್ಯೋತಿಗಳು ಮತ್ತು ಪ್ರಾಣಿ ಪ್ರಬಂಧಗಳು ಮೈಗಳ್ಳನ ದಿನಚರಿಯಿಂದ ಮೈಲಿಕಲ್ಲಿನೊಡನೆ ಮಾತುಕತೆಗಳು ಹಳ್ಳಿಯ ಹತ್ತು ಸಮಸ್ತರು ಪ್ರವಾಸ ಕಥನ ಅಪೂರ್ವ ಪಶ್ಚಿಮ ಅರಸಿಕರಲ್ಲ ಅಬೂವಿನಿಂದ ಬರಾಮಕ್ಕೆ ಪಾತಾಳಕ್ಕೆ ಪಯಣ ಪೂರ್ವದಿಂದ ಅತ್ಯಪೂರ್ವಕ್ಕೆ ಯಕ್ಷರಂಗಕ್ಕಾಗಿ ಪ್ರವಾಸ ಆತ್ಮಕಥನ ಸ್ಮೃತಿಪಟಲದಿಂದ (೧,೨,೩) ಹುಚ್ಚು ಮನಸ್ಸಿನ ಹತ್ತು ಮುಖಗಳು ಜೀವನ ಚರಿತ್ರೆ ಕಲಾವಿದ ಕೃಷ್ಣ ಹೆಬ್ಬಾರರು ಕಲಾಪ್ರಬಂಧ ಕಲೆಯ ದರ್ಶನ ಕರ್ನಾಟಕದಲ್ಲಿ ಚಿತ್ರಕಲೆ ಚಾಲುಕ್ಯ ವಾಸ್ತು ಮತ್ತು ಶಿಲ್ಪ ಚಿತ್ರಶಿಲ್ಪ, ವಾಸ್ತುಕಲೆಗಳು ಜಾನಪದ ಗೀತೆಗಳು ಭಾರತೀಯ ಚಿತ್ರಕಲೆ ಭಾರತೀಯ ಶಿಲ್ಪ ಯಕ್ಷಗಾನ ಬಯಲಾಟ ಸೌಂದರ್ಯ ಪ್ರಜ್ಞೆಯನ್ನು ಬೆಳೆಯಿಸಲು ವೈಜ್ಞಾನಿಕ ಅದ್ಭುತ ಜಗತ್ತು (೧. ವಿಚಿತ್ರ ಖಗೋಲ, ೨. ನಮ್ಮ ಭೂಖಂಡಗಳು) ಉಷ್ಣವಲಯದ ಆಗ್ನೇಸ್ಯ ಪ್ರಾಣಿ ಪ್ರಪಂಚದ ವಿಸ್ಮಯಗಳು ಮಂಗನ ಕಾಯಿಲೆ ವಿಜ್ಞಾನ ಮತ್ತು ಅಂಧಶೃದ್ಧೆ ವಿಶಾಲ ಸಾಗರಗಳು ಹಿರಿಯ ಕಿರಿಯ ಹಕ್ಕಿಗಳು ಇತರ ಪ್ರಜಾಪ್ರಭುತ್ವವನ್ನು ಕುರಿತು ಬಾಳ್ವೆಯೇ ಬೆಳಕು ಬಾಳ್ವೆಯೇ ಬೆಳಕು ಅಥವಾ ಜೀವನ ಧರ್ಮ ಮನೋದೇಹಿಯಾದ ಮಾನವ ವಿಚಾರಶೀಲತೆ ವಿಚಾರ ಸಾಹಿತ್ಯ ನಿರ್ಮಾಣ ಸ್ವಾರ್ಥಿ ಮಾನವ ಸಂಪಾದನೆ ಐರೋಡಿ ಶಿವರಾಮಯ್ಯ ಬದುಕು, ಬರಹ ಕೌಶಿಕ ರಾಮಾಯಣ ಪಂಜೆಯವರ ನೆನಪಿಗಾಗಿ ವಿಶ್ವಕೋಶ ಕಲಾ ಪ್ರಪಂಚ ಪ್ರಾಣಿ ಪ್ರಪಂಚ ಬಾಲ ಪ್ರಪಂಚ (೧,೨,೩) ವಿಜ್ಞಾನ ಪ್ರಪಂಚ (೧,೨,೩,೪) ನಿಘಂಟು ಸಿರಿಗನ್ನಡ ಅರ್ಥಕೋಶ ಅನುವಾದ ಕೀಟನಾಶಕಗಳ ಪಿಡುಗುಗಳು ಕೋಟ ಮಹಾಜಗತ್ತು ಜನತೆಯೂ ಅರಣ್ಯಗಳೂ ನಮ್ಮ ಪರಮಾಣು ಚೈತನ್ಯ—ಉತ್ಪಾದನಾ ಸಾಧನಗಳು ನಮ್ಮ ಶಿಕ್ಷಣ ಪದ್ಧತಿಯ ಸಮಸ್ಯೆಗಳೂ, ಭವಿಷ್ಯವೂ ನಮ್ಮ ಸುತ್ತಲಿನ ಕಡಲು ನಮ್ಮೆಲ್ಲರಿಗೂ ಒಂದೇ ಭವಿಷ್ಯ ಪರಮಾಣು – ಇಂದು ನಾಳೆ ಪಂಚ ಋತು ಬೆಳೆಯುತ್ತಿರುವ ಸಮಸ್ಯೆ ಭಾರತದ ಪರಿಸರ – ದ್ವಿತೀಯ ಸಮಿಕ್ಷೆ ಭಾರತದ ಪರಿಸರದ ಪರಿಸ್ಥಿತಿ – ೧೯೮೨ – ಪ್ರಜೆಯ ದೃಷ್ಟಿಯಲ್ಲಿ ಭಾರತ ವರ್ಷದಲ್ಲಿ ಬ್ರಿಟಿಷರು ಯಾರು ಲಕ್ಷಿಸುವರು? ಶ್ರೀ ರಾಮಕೃಷ್ಣರ ಜೀವನ ಚರಿತೆ ಮಕ್ಕಳ ಪುಸ್ತಕಗಳು ಅನಾದಿ ಕಾಲದ ಮನುಷ್ಯ ಒಂದೇ ರಾತ್ರಿ ಒಂದೇ ಹಗಲು ಗಜರಾಜ ಗೆದ್ದವರ ಸತ್ಯ ಢಂ ಢಂ ಢೋಲು ನರನೋ ವಾನರನೋ ಮರಿಯಪ್ಪನ ಸಾಹಸಗಳು ಮಂಗನ ಮದುವೆ ಸೂರ್ಯ ಚಂದ್ರ ಹುಲಿರಾಯ ಕನ್ನಡ ನಾಡು ಮತ್ತು ಕನ್ನಡಿಗರ ಪರಂಪರೆಗೆ ಸಂಬಂಧಿಸಿದ ೧೦ ಪುಸ್ತಕಗಳು ಐಬಿಎಚ್, ಮೂಲವಿಜ್ಞಾನ ಪಾಠಮಾಲೆ ಹಾಗು ‘ಇಕೊ’ ದವರಿಗಾಗಿ ಮಾಡಿದ ಅನುವಾದಗಳು : ಸುಮಾರು ೧೩೩ ‘ಇಕೊ’ ದವರಿಗಾಗಿ ಮಾಡಿದ ಸಂಪಾದಿತ ಪುಸ್ತಕಗಳು : ೪೨ ಶೈಕ್ಷಣಿಕ ಕೃತಿಗಳು ಮಕ್ಕಳ ಶಿಕ್ಷಣ ಓದುವ ಆಟ ಗೃಹ ವಿಜ್ಞಾನ (೧,೨,೩) ಚಿತ್ರಮಯ ದಕ್ಷಿಣ ಕನ್ನಡ ಚಿತ್ರಮಯ ದಕ್ಷಿಣ ಕನ್ನಡ – ಅಂದು, ಇಂದು ಚಿತ್ರಮಯ ದಕ್ಷಿಣ ಹಿಂದುಸ್ತಾನ ನಾಗರಿಕತೆಯ ಹೊಸ್ತಿಲಲ್ಲಿ ರಮಣ ತಾತ ಸ್ನೀತಿ (೧,೨,೩) ಸಾಮಾನ್ಯ ವಿಜ್ಞಾನ (೧,೨,೩) ಸಿರಿಗನ್ನಡ ಪಾಠಮಾಲೆ (೧,೨,೩,೪,೫,೬,೭) ಹೂಗನ್ನಡ ಪಾಠಮಾಲೆ (೧,೨,೩,೪,೫,೬,೭,೮) ವಯಸ್ಕರ ಶಿಕ್ಷಣ ಅಳಿಲ ಭಕ್ತಿ ಮಳಲ ಸೇವೆ ಕರ್ನಾಟಕದ ಜಾನಪದ ಕಲೆಗಳು ಕೋಳಿ ಸಾಕಣೆ ಜೋಗಿ ಕಂಡ ಊರು ದಕ್ಷಿಣ ಹಿಂದುಸ್ತಾನದ ನದಿಗಳು ದೇವ ಒಲಿದ ಊರು ಬೇರೆಯವರೂ ಸರಿ ಇರಬಹುದು ಹುಟ್ಟು ಸಾವು ಒಟ್ಟು ಒಟ್ಟು ಆಂಗ್ಲ ಭಾಷೆಯಲ್ಲಿ ಸಾಹಿತ್ಯ ಕೃತಿಗಳು Folk Art of Karnataka Karnataka Paintings My Concern for Life, Literature and Art Picturesque South Kanara Yakshagana ಕಾರಂತರ ಕೆಲವು ಚಿಂತನೆಗಳು ನಾನು ದೇವರನ್ನು ನಂಬುವುದಿಲ್ಲ. ಏಕೆಂದರೆ ನಾನು ನೋಡಿಲ್ಲ. ನನಗೆ ಯಾವುದು ಗೊತ್ತಿಲ್ಲವೋ ಅದನ್ನು ನಂಬುವುದಿಲ್ಲ. ರಾಮಕೃಷ್ಣ ಪರಮಹಂಸರು ನಂಬಿದ್ದರು. ಅದನ್ನು ತಪಸ್ಸಿನಿಂದ ಕಂಡುಕೊಂಡರು. ನನಗೆ ರಾಮ ಎಂದರೆ ರಾಜಾ ರವಿವರ್ಮ ಅವರ ಚಿತ್ರ. ಕೃಷ್ಣ ಎಂದರೆ ಗುಬ್ಬಿ ವೀರಣ್ಣನವರ ಕೃಷ್ಣಲೀಲಾ ನೆನಪಿಗೆ ಬರುತ್ತದೆ. ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದಾಗುತ್ತದೆ ಎಂದು ನಾವು ನಂಬಿ ಬಂದಿದ್ದೇವೆ. ಆದರೆ ಆ ರೀತಿ ಆಗಿಲ್ಲ. ನನಗೆ ಅನುಕೂಲವಾದಾಗ ಮಾತ್ರ ದೇವರನ್ನು ನಂಬುತ್ತೇನೆ ಎಂಬುದು ಸರಿಯಲ್ಲ. ಸಾಹಿತಿಗಳಿಗೆ ಸಮಾಜದಲ್ಲಿ ಬೇರೆ ಪಾತ್ರವೇನೂ ಇಲ್ಲ. ಸಾಹಿತಿ ಲೋಕೋದ್ಧಾರಕ ಎಂಬ ಭಾವನೆ ಏನೂ ಬೇಡ. ಆತನೂ ನಿಮ್ಮ ಹಾಗೆ ಮನುಷ್ಯ. ಬದುಕಿನ ಬಗ್ಗೆ ತನ್ನ ಅನುಭವವನ್ನು ಮಾತ್ರ ಹೇಳುತ್ತಾನೆ. ಪರಿಹಾರ ಸೂಚಿಸುವುದಲ್ಲ. ಆತ ಬರೆದ ಮಾತ್ರಕ್ಕೆ ಮಹಾನುಭಾವ ಆಗೋಲ್ಲ. ಬರೆಯದವರೂ ದೊಡ್ಡ ಕೆಲಸಗಳನ್ನು ಮಾಡಿದ್ದಾರೆ. ಮರ ತಾನಾಗಿ ಬೆಳೆಯುತ್ತದೆ. ಆ ರೀತಿ ಮನುಷ್ಯ ಬೆಳೆಯಲಾರ. ನಮ್ಮ ಬದುಕು ಆರಂಭವಾಗುವುದಕ್ಕೆ ಸಾವಿರಾರು ವರ್ಷಗಳ ಮೊದಲೇ ಜೀವರಾಶಿ ಇಲ್ಲಿತ್ತು ಎಂಬುದನ್ನು ತಿಳಿದರೆ ಸಾಕು. ಸಮಾಜ ನನ್ನನ್ನು ಹೇಗೆ ಕಂಡಿತು - ಎಂದು ನಾನು ತಿಳಿದುಕೊಳ್ಳುವ ಬಗೆ ಹೇಗೆ? ಒಂದು ಗ್ರಂಥದ ಸಾವಿರ ಪ್ರತಿಗಳು ಹತ್ತು ವರ್ಷಗಳಲ್ಲಿ ಖರ್ಚಾದರೆ, ಅವನ್ನು ಓದಿದವರಲ್ಲಿ ಹತ್ತು ಮಂದಿ ನನಗೆ ಪತ್ರ ಬರೆದರೆ, ಅದರಿಂದ ಜನಗಳು ನನ್ನನ್ನು ಮೆಚ್ಚುತ್ತಿದ್ದಾರೆ- ಎಂದು ತಿಳಿಯಲು ಸಾಧ್ಯವೇ? ನಾವು ಬರೆಯುವುದು ಸಾಮಾಜಿಕರೊಡನೆ ಸಂಭಾಷಿಸುವುದಕ್ಕಾಗಿ. ಈ ಸಂಭಾಷಣೆ ಏಕಮುಖಿಯಾದದ್ದು. ನಾವೇನೋ ಗ್ರಂಥಗಳಲ್ಲಿ ಅನೇಕ ವಿಚಾರಗಳನ್ನು ಮಂಡಿಸುತ್ತೇವೆ; ಓದುಗರು ನಮ್ಮ ಕಣ್ಮುಂದೆ ಇರುವುದಿಲ್ಲ. ಅವರ ಮನಸ್ಸಿನಲ್ಲಿ ಓದುತ್ತ, ಓದುತ್ತ ಯಾವೆಲ್ಲ ಪ್ರತಿಕ್ರಿಯೆಗಳಾಗುತ್ತವೆ ಎಂದು ತಿಳಿಯುವ ಬಗೆ ಹೇಗೆ? ಆರಂಭದಿಂದಲೂ ನನ್ನ ಪುಸ್ತಕಗಳನ್ನು ಪತ್ರಿಕೆಗಳಿಗೆ ವಿಮರ್ಶೆಗೆ ಕಳುಹಿಸುವ ಪರಿಪಾಠವನ್ನು ನಾನು ಇರಿಸಿಕೊಳ್ಳದ್ದರಿಂದ, ವಿಮರ್ಶಕರು ಏನು ಹೇಳುತ್ತಾರೆಂಬುದು ಕೂಡಾ ನನಗೆ ತಿಳಿಯದ ಸಂಗತಿ. ಯಾರು ಏನನ್ನೇ ಹೇಳಲಿ, ನನಗೆ ತೋಚಿದಂತೆ ಬರೆಯುತ್ತೇನೆ- ಎಂದು ಬರೆಯುವ ನನಗೆ ಜನಾದರಣೆಯ ವಿಚಾರ ತಿಳಿಯುವುದು ಕಷ್ಟ. ವಿಕ್ರಯಗೊಳ್ಳುವ ಪುಸ್ತಕಗಳ ಸಂಖ್ಯೆಯಿಂದ ನಾನು ಅದನ್ನು ತರ್ಕಿಸುವುದಾದರೆ, ನನ್ನ ಜನಪ್ರಿಯತೆಗೆ ಬೇಕಾದ ಆಧಾರ ಸಿಗುವಂತಿಲ್ಲ. ಒಂದು ಕಾದಂಬರಿಯ ಸಾವಿರ ಪ್ರತಿಗಳು ಹತ್ತು ವರ್ಷಗಳಲ್ಲಿ ವಿಕ್ರಯಗೊಳ್ಳುವ, ಅಥವಾ ಅದರ ಭರ ಒಂದಿಷ್ಟು ಹೆಚ್ಚಿಗಿದ್ದರೂ, ಒಂದು ಪುಸ್ತಕದ ಮರು ಮುದ್ರಣ ವರ್ಷಕ್ಕೆ ನೂರು ಪ್ರತಿಗಳಿಗಿಂತ ಹೆಚ್ಚಿಗೆ ವಿಕ್ರಯಗೊಳ್ಳದಾಗ, ಅಲ್ಲಿ ಇಲ್ಲಿ, ನನ್ನನ್ನು ಜನರು ಭಾಷಣಗಳ ಕಾಲದಲ್ಲಿ ಸುಪ್ರಸಿದ್ಧ ಸಾಹಿತಿ ಎಂದು ಕರೆದರೂ, ಅಂಥ ಪ್ರಸಿದ್ಧಿಯ ಗಾತ್ರ ಸಾಕಷ್ಟು ಕುಬ್ಜವಾದದ್ದು ಎಂಬ ಅಭಿಪ್ರಾಯ ನನಗೆ. ಆ ದೃಷ್ಟಿಯಿಂದ ದಿವಂಗತ ಅ.ನ.ಕೃಷ್ಣರಾಯರು ಬರೆದ ಕಾದಂಬರಿಗಳು ನನಗಿಂತ ಎಷ್ಟೋ ಪಾಲು ಹೆಚ್ಚಿನ ಜನಾಕರ್ಷಣೆಯನ್ನು ಪಡೆದಿವೆ. ನನ್ನ, ಅವರ ಓದುಗರು ಯಾರು ಎಂಬುದನ್ನು ಕೂಡ ವಿಂಗಡಿಸಿ ತಿಳಿಯುವುದು ಕಷ್ಟ. ಅಂಥ ಓದುಗರು ಪ್ರಬುದ್ಧ ರೋ, ಅಪ್ರಬುದ್ಧರೋ, ಹೆಂಗಸರೋ, ಗಂಡಸರೋ, ತರುಣರೋ, ವೃದ್ಧರೋ, ಗಂಭೀರ ವಿಚಾರಕ್ಕೆ ಮನಸ್ಸು ಕೊಡುವವರೋ, ಅನುಭವ ಸಾಮ್ಯತೆ ಪಡೆದವರೋ, ಚಿಂತನಶೀಲರೋ, ಅಲ್ಲದವರೋ- ಇಂಥ ಯಾವೊಂದು ಸಂಗತಿಗಳನ್ನೂ ಎಣಿಸದೆ ಜನಮನ್ನಣೆಯ ತೂಕವನ್ನು ಅಳೆಯುವುದು ಅಸಾಧ್ಯ. ಆದಷ್ಟು ಕಡಿಮೆ ತಿನ್ನಿ. ನಾಲಗೆ ರುಚಿಗಾಗಿ ಸಿಕ್ಕಿದ್ದನ್ನೆಲ್ಲಾ ತಿನ್ನುವುದಲ್ಲ. ಮನಬಂದ ಕೆಲಸವನ್ನೆಲ್ಲಾ ಮಾಡುವುದಲ್ಲ. ಇದು ನನ್ನ ಆರೋಗ್ಯದ ರಹಸ್ಯ. ವಿಕಿಕೋಟ್‍ನಲ್ಲಿ ಶಿವರಾಮ ಕಾರಂತರ ಉಕ್ತಿಗಳು. ವಿದ್ವಾಂಸರ ಕಣ್ಣಲ್ಲಿ ಕಾರಂತರ ಸಾಹಿತ್ಯ ತೀ.ನಂ.ಶ್ರೀಕಂಠಯ್ಯ ಶ್ರೀ ಶಿವರಾಮ ಕಾರಂತರು ನಮ್ಮ ತಲೆಮಾರಿನ ಕನ್ನಡದ ಕ್ರಾಂತಿಪುರುಷರಲ್ಲಿ ಒಬ್ಬರು. ಅವರ ಪ್ರತಿಭೆಗೆ ಅಳವಡದ ಕಲೆಯಿಲ್ಲ. ಅವರ ಲೇಖನಿಯಿಂದ ಸತತವಾಗಿ ಹೊರಬೀಳುತ್ತಿರುವ ಕೃತಿಗಳಲ್ಲಿ ಹಲವನ್ನು ಓದಿ ಮೆಚ್ಚಿರುವ ಅನೇಕ ಮಂದಿ ಕನ್ನಡಿಗರಲ್ಲಿ ನಾನೂ ಒಬ್ಬ. ದೂರದಿಂದ ಮಾತ್ರ ವಲ್ಲದೆ ಹತ್ತಿರದಿಂದಲೂ ಅವರ ಬಹುಮುಖವಾದ ಕಾರ್ಯೋತ್ಸಾಹವನ್ನು ಆಗಾಗ ವೀಕ್ಷಿಸಿ ಬೆರಗಾಗಿದ್ದೇನೆ; ಅವರ ಪರಿಚಯ ಭಾಗ್ಯವನ್ನೂ ಕೆಲವು ಮಟ್ಟಿಗೆ ಪಡೆದು ನನ್ನ ಅನುಭವ ಆನಂದಗಳನ್ನೂ ಹೆಚ್ಚಿಸಿಕೊಂಡಿದ್ದೇನೆ. ನಿಸರ್ಗವೇ ನಮ್ಮ ಎದುರಿಗೆ ಸುರುಳಿ ಬಿಚ್ಚಿಕೊಂಡು ಸಾಗುತ್ತಿದ್ದರೆ ಉಂಟಾಗಬಹುದಾದ ಅನುಭವ ಕಾರಂತರ ಕೃತಿಗಳನ್ನು ಓದುತ್ತಿರುವಾಗ ನನಗೆ ಅನೇಕ ವೇಳೆ ಲಭಿಸಿದೆ. ಅವರ ಬರಹದಲ್ಲಿ ಒಟ್ಟಿನ ಮೇಲೆ ಕಲೆಯ ನಿರ್ಮಿತಿಗಿಂತ ನಿಸರ್ಗದ ಆವಿಷ್ಕೃತಿ ಹೆಚ್ಚು. ಇಲ್ಲಿ ನಿಸರ್ಗವೆಂದರೆ ಕಡಲು, ಬೆಟ್ಟ, ಹೊಳೆ, ಕಾಡು ಮೊದಲಾದ ಅಚೇತನ ಪ್ರಕೃತಿ ಮಾತ್ರವಲ್ಲ, ವಿವಿಧ ವಿಚಿತ್ರವಾದ ಮಾನವಪ್ರಕೃತಿಯೂ ಅವರಲ್ಲಿ ಹಾಸುಹೊಕ್ಕಾಗಿ ಸೇರುತ್ತದೆ. ಕಾರಂತರ ಬರವಣಿಗೆ ಬೆಳೆದಂತೆಲ್ಲ ಅವರ ಸಹಾನುಭೂತಿ ಶಕ್ತಿಯೂ ಬೆಳೆದು ಬಂದಿರುವಂತೆ ಕಾಣುತ್ತದೆ. ದುಡಿಮೆ ದುಃಖ ಇವೇ ತಮ್ಮ ಬಾಳಿನ ಸಾರವಾದರೂ ಅಚಲ ಶ್ರದ್ಧೆಯನ್ನು ಭದ್ರವಾಗಿ ನೆಮ್ಮಿ ನಿಲ್ಲುವ ಸ್ತ್ರೀಪಾತ್ರಗಳಲ್ಲಂತೂ ಕಾರಂತರಿಗೆ ಅಪಾರ ಗೌರವ. ಇಂಥ ಪಾತ್ರಗಳಿಂದ ಲೇ ಅವರ ಮಹಾಕೃತಿ ಮರಳಿ ಮಣ್ಣಿಗೆ, ನಂಬಿದವರ ನಾಕ-ನರಕ ಮೊದಲಾದವು ಅಮರವಾಗಿರುವುದು. ವಿಚಾರಪರರಾದ ಕಾರಂತರ ದೃಷ್ಟಿಯಲ್ಲಿ ಬಾಳ್ವೆಯೇ ಬೆಳಕು. ಆದರೆ ಅನ್ಯರ ಬದುಕನ್ನು ಅರ್ಥಮಾಡಿಕೊಳ್ಳಬೇಕಾದರೆ ಅವರ ಸಾಂಪ್ರದಾಯಿಕವಾದ ನಂಬಿಕೆಗಳನ್ನು -ಅವು ತಮ್ಮವಲ್ಲದಿದ್ದರೂ- ಅರ್ಥಮಾಡಿಕೊಳ್ಳಬೇಕು ಎಂಬುದು ಕಾರಂತರ ಧೃಡತತ್ವ. ಡಾಂಭಿಕವರ್ತನೆಯನ್ನು, ಆಷಾಡಭೂತಿ ವಿದ್ಯೆಯನ್ನು ಕಂಡರೆ ಮಾತ್ರ ಅವರಿಗೆ ಎಂದಿಗೂ ಆಗದು. ಅದನ್ನು ವ್ಯಂಗ್ಯವಾಗಿ ವಾಚ್ಯವಾಗಿ ಅವರು ಖಂಡಿಸುತ್ತಲೇ ಇರುತ್ತಾರೆ. ಇಷ್ಟಾದರೂ ಬದುಕಿನ ಅನಂತ ವಿವಿಧತೆಯನ್ನು ಅವರು ಚೆನ್ನಾಗಿ ಮನಗಂಡವರು; 'ಹಳ್ಳಿಯ ಹತ್ತು ಸಮಸ್ತರು' ಎಂಬ ಅಪೂರ್ವ ಕೃತಿ ಇದಕ್ಕೆ ಉತ್ತಮ ಸಾಕ್ಷಿ. ಕಾದಂಬರಿಯ ತಂತ್ರದ ಕಡೆ ಕಾರಂತರ ಗಮನ ಕಡಿಮೆ. ಆದರೆ ಮನಸ್ಸು ಮಾಡಿದರೆ ಅದರಲ್ಲಿ ಎಂಥ ಸಿದ್ಧಿಯನ್ನು ಅವರು ಮುಟ್ಟಬಲ್ಲರೆಂಬುದನ್ನು ಅವರ 'ಅಳಿದ ಮೇಲೆ' ಸಾರುತ್ತದೆ. ಪೂರ್ಣಚಂದ್ರ ತೇಜಸ್ವಿ ಲೋಹಿಯಾರವರ ತತ್ವ ಚಿಂತನೆ,ಕುವೆಂಪುರವರ ಕಲಾಸೃಷ್ಟಿ, ಕಾರಂತರ ಜೀವನದ ದೃಷ್ಟಿ ಮತ್ತು ಬದುಕಿನಲ್ಲಿನ ಪ್ರಯೋಗಶೀಲತೆ- ಈ ಮೂರೇ ನನ್ನ ಈಚಿನ ಸಾಹಿತ್ಯ ರಚನೆಯ ಮೇಲೆ ಗಾಢ ಪರಿಣಾಮಗಳನ್ನುಂಟು ಮಾಡಿರುವಂಥವು. ಬಹುಶಃ ಮುಂಬರುವ ಕಲಾವಿದ ರಿಗೆ ಕನ್ನಡ ಸಾಹಿತ್ಯ ಸೃಷ್ಟಿಯಲ್ಲಿ ಚೈತನ್ಯಶಕ್ತಿಯಾಗಬಲ್ಲಂಥವು ಈ ಮೂರೇ. ಹಾ.ಮಾ.ನಾಯಕ ಯಾವ ಮಾನದಿಂದ ಅಳೆದರೂ ಕಾರಂತರು ವಿಶ್ವಲೇಖಕರ ಪಟ್ಟಿಯಲ್ಲಿ ಸೇರಬಲ್ಲವರು. ಗೋಪಾಲಕೃಷ್ಣ ಅಡಿಗ ಶಿವರಾಮ ಕಾರಂತರನ್ನು ನಿಮಗೆ ಪರಿಚಯ ಮಾಡಿಕೊಡುವುದೂ ಒಂದೇ, ನೇಸರನ್ನು ಸೊಡರಿನಿಂದ ತೋರಿಸುವುದೂ ಒಂದೇ. ಜಿ.ಎಸ್.ಶಿವರುದ್ರಪ್ಪ ಬೆಟ್ಟ ಕಡಲಿನ ನಡುವೆ ಹುಟ್ಟಿದ ಈ ಚೈತನ್ಯ ಕಡಲಿನಷ್ಟೇ ವಿಸ್ತಾರವಾದ ಅನುಭವಗಳನ್ನು ತಮ್ಮ ಕೃತಿಗಳಲ್ಲಿ ಹಿಡಿದಿರಿಸಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಾರಂತರ ನಿಧನದಿಂದ ಉಜ್ವಲವಾದ ಸೃಜನ ಪರಂಪರೆಯ ಒಂದು ತಲೆಮಾರಿನ ಮುಕ್ತಾಯದ ಶೂನ್ಯದೊಳಕ್ಕೆ ನಾವು ಪ್ರವೇಶಿಸಿದ ಅನುಭವವಾಗುತ್ತಿದೆ. ಬಾಲವನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶ್ರೀ. ಕೆ. ಶಿವರಾಮ ಕಾರಂತರ ಕರ್ಮಭೂಮಿಯೇ ಬಾಲವನ. ಪುತ್ತೂರಿನ ಕಾರಂತ ಬಾಲವನ ಕಲಾ ಗ್ಯಾಲರಿ, ಗ್ರಂಥಾಲಯ, ವಸ್ತು ಸಂಗ್ರಹಾಲಯ, ನಾಟ್ಯ ಶಾಲೆ, ರಂಗ ಮಂದಿರ, ಆಟದ ಮೈದಾನ ಮತ್ತು ಈಜುಕೊಳವನ್ನು ಒಳಗೊಂಡಿದೆ. ಇವುಗಳ ವೀಕ್ಷಣೆಗೆ ಸಮಯಾವಕಾಶ ಈ ರೀತಿ ಇದೆ, ಗ್ಯಾಲರಿ ಸಮಯ: 2..00 P.M – 6.00 P.M ಮತ್ತು 2..00 P.M – 6.00 P.M ಮ್ಯೂಸಿಯಂನ ಸಮಯ: 9.30 A.M – 1.00 P.M ಮತ್ತು 2.00 P.M – 6.00 P.M ಗ್ರಂಥಾಲಯದ ಸಮಯ: 10.00 A.M – 1.00 P.M ಮತ್ತು 3.30 P.M - 7.00 P.M ಬಾಲವನದಲ್ಲಿ ಕಾರಂತಜ್ಜ ಕಾರಂತರು ಕೆಲಕಾಲ ತರಂಗ ಸಾಪ್ತಾಹಿಕದ 'ಬಾಲವನ' - ಮಕ್ಕಳ ವಿಭಾಗದಲ್ಲಿ 'ಬಾಲವನದಲ್ಲಿ ಕಾರಂತಜ್ಜ' ಎಂಬ ಕಾಲಂ ನಡೆಸಿ ಕೊಡುತ್ತಿದ್ದರು. ಇದು ಬಹಳವಾಗಿ ಜನಪ್ರಿಯವಾಗಿತ್ತು. ಪುಟಾಣಿಗಳು ಕಳುಹಿಸಿದ ವಿಜ್ಞಾನ ಕುರಿತ ಪ್ರಶ್ನೆಗಳಿಗೆ ಕಾರಂತರು ಮಕ್ಕಳಿಗೆ ಅರ್ಥ ವಾಗುವಂತೆ ಸರಳ ರೀತಿಯಲ್ಲಿ ಉತ್ತರ ನೀಡುತ್ತಿದ್ದರು. ಆಗಿನ ತಲೆಮಾರಿನ ಕನ್ನಡಿಗರಿಗೆ ಕಾರಂತರು, 'ಕಾರಂತಜ್ಜ' ರೆಂದೇ ಚಿರಪರಿಚಿತ. ಪ್ರಶಸ್ತಿ/ಪುರಸ್ಕಾರಗಳು ಜ್ಞಾನಪೀಠ ಪ್ರಶಸ್ತಿ ಪದ್ಮಭೂಷಣ ಪ್ರಶಸ್ತಿ ವಿವಿಧ ವಿಶ್ವವಿದ್ಯಾನಿಲಯಗಳಿಂದ ಡಾಕ್ಟರೇಟ್ ರಾವ್ ಬಹದೂರ್ ಪ್ರಶಸ್ತಿ (೧೯೩೦ ರಲ್ಲಿ) ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಂಪ ಪ್ರಶಸ್ತಿ ನಿಧನ ಅರ್ಥಪೂರ್ಣ ಬದುಕು ಕಳೆದ ಸಾಹಿತ್ಯ ದಿಗ್ಗಜ ಡಾ. ಶಿವರಾಮಕಾರಂತರು ೧೯೯೭ ಡಿಸೆಂಬರ್ ೦೯ ರಂದು ನಿಧನ ಹೊಂದಿದರು. ನಿಸರ್ಗದ ಚೆಲುವಿನೊಂದಿಗೆ ಅವಿರತವಾಗಿ ಸಾಹಿತ್ಯ ಸೃಷ್ಟಿಸಿದವರು ಕಾರಂತರು. ದೂರದ ಕೋಟದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದು ಪ್ರಕೃತಿಯ ಮಡಿಲಿನಲ್ಲಿ ಜೀವನದ ಹೋರಾಟದೊಂದಿಗೆ, ಸಮಗ್ರ ಕೋನವನ್ನು ಸ್ಪರ್ಷಿಸಿ ಧನ್ಯತೆಯ ಭಾವವನ್ನು ಕಾಣಲು ಸಾಧ್ಯವಾದ ದಿವ್ಯ ಕ್ಷೇತ್ರ. ಪತ್ರಗಳಲ್ಲಿ ಕಾರಂತ ಪತ್ರಗಳಲ್ಲಿ ಕಂಡ ಬಹುತ್ವದ ಪರಿಕಲ್ಪನೆ;;ಎಸ್. ಆರ್. ವಿಜಯಶಂಕರ Updated: 18 ಅಕ್ಟೋಬರ್ 2020 ಉಲ್ಲೇಖ ಬಾಹ್ಯಸಂಪರ್ಕಗಳು 'ನೆನಪು ಕಹಿಯಲ್ಲ',ಪರಂಜ್ಯೋತಿ,ಮಯೂರ, ಜೂನ್,೨೦೧೬,ಪು.೧೫೩-೧೩೬ . ಕಾರಂತರು ನಕ್ಕ ಸಮಯ! ಶಿವರಾಮ ಕಾರಂತರ ಆಪ್ತ ಸಹಾಯಕಿ 'ಮಾಲಿನಿ ಮಲ್ಯ' ನಿಧನ ಈ‌ ಪುಟಗಳನ್ನೂ ನೋಡಿ ಶಿವರಾಮ ಕಾರಂತರ ಕೃತಿಗಳು ಕವಿಗಳು ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ೧೯೦೨ ಜನನ ೧೯೯೭ ನಿಧನ ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು ಪಂಪ ಪ್ರಶಸ್ತಿ ಪುರಸ್ಕೃತರು ವಿಜ್ಞಾನ ಸಾಹಿತಿಗಳು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು
1108
https://kn.wikipedia.org/wiki/%E0%B2%97%E0%B3%8B%E0%B2%95%E0%B2%BE%E0%B2%95
ಗೋಕಾಕ
ಗೋಕಾಕ್ ಬೆಳಗಾವಿ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಈ ಜಿಲ್ಲೆಯಲ್ಲಿ ಸುಪ್ರಸಿದ್ಧ ಗೋಕಾಕ ಜಲಪಾತವಿದೆ. ಈ ಜಲಪಾತದಡಿಯಲ್ಲಿ ವಿದ್ಯುತ್ಚಕ್ತಿಯನ್ನು ಉತ್ಪಾದಿಸಲಾಗುತ್ತದೆ.ಗೋಕಾಕ ನಗರವು ಮೂಲತ: ಒಂದು ವಾಣಿಜ್ಯ ನಗರವಾಗಿದೆ. ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆಯು ಬೆಲ್ಲ , ಗೋವಿನ ಜೊಳ ಮತ್ತು ಹತ್ತಿಯ ವ್ಯಾಪಾರಕ್ಕೆ ಹೆಸರುವಾಸಿಯಾಗಿದೆ. ಇತ್ತಿಚಿಗೆ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿರುವ ಕೈಗಾರಿಕಾ ನಗರವಾಗಿಯೂ ಗುರುತಿಸಿಕೊಂಡಿದೆ. ಇಲ್ಲಿ ಮುಖ್ಯವಾಗಿ ಜವಳಿ, ಸಕ್ಕರೆ, ಮತ್ತು ಗೊವಿನ ಜೊಳ ಸಂಸ್ಕರಣೆ, ಮತ್ತು ಸಿಮೆಂಟ್ ಕೈಗಾರಿಕೆಗಳು ನೆಲೆಗೊಂಡಿವೆ. ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ನಗರವನ್ನು ಹೊರತುಪಡಿಸಿ ಇದೆ ಅತ್ಯಂತ ಜನನಿಬಿಡ ಹಾಗೂ ದೊಡ್ಡ ನಗರವಾಗಿದೆ. ಇತಿಹಾಸ ಗೋಕಾಕ್ ನಗರವು ಐತಿಹಾಸಿಕವಾಗಿಯೂ ಪ್ರಾಮುಖ್ಯತೆ ಪಡೆದ ಸ್ಥಳವಾಗಿದೆ. ಬಾದಾಮಿ ಚಾಲುಕ್ಯರು, ಕಲ್ಯಾಣದ ಚಾಲುಕ್ಯರು ಈ ಪ್ರದೇಶವನ್ನು ಆಳಿದ್ದಾರೆ. ತದನಂತರ ಮೊಘಲರ್ ಆಡಳಿತದಲ್ಲಿ ಬಿಜಾಪುರ ಸುಲ್ತಾನರು ಗೋಕಾಕ್ ಕೋಟೆಯನ್ನು ವಶಪಡಿಸಿಕೊಂಡರು. ಬಳಿಕ ಸವಣೂರಿನ ನವಾಬರು ಇದನ್ನು ಜಹಗೀರಾಗಿ ಪಡೆದುಕೊಂಡರು. ಇದಲ್ಲದೆ ಆಯಕಟ್ಟಿನ ಸ್ಥಳವಾಗಿದ್ದ ಹಿನ್ನೆಲೆಯಲ್ಲಿ ಈ ಪ್ರದೇಶ ಕೆಲಕಾಲ ಜಮಖಂಡಿ ಸಂಸ್ಥಾನ, ಕಿತ್ತೂರು ಸಂಸ್ಥಾನ ಹಾಗೂ ಮರಾಠಾ ಪೆಶ್ವೆಗಳ ಆಡಳಿತಕ್ಕೂ ಒಳಪಟ್ಟಿತ್ತು. ನಂತರದ ಬ್ರಿಟಿಷ್ ಆಡಳಿತಾವಧಿಯಲ್ಲಿ ಬೆಳಗಾವಿ ಜಿಲ್ಲೆಯ ಉಪವಿಭಾಗದ ಕೇಂದ್ರವಾಗಿತ್ತು. 1956 ರಲ್ಲಿ ರಾಜ್ಯ ಪುನರ್ವಿಂಗಡನೆಯಾದಾಗ ಮುಂಬಯಿ ಸರ್ಕಾರದಿಂದ ಬೇರ್ಪಟ್ಟು ಕರ್ನಾಟಕದೊಂದಿಗೆ ಸೇರಿಸಲ್ಪಟ್ಟಿತು.ಮತ್ತು ಸಮಿಪದ ಕಲ್ಲೋಳಿ ಗ್ರಾಮವು 1000 ಸಾವಿರ ಶತಮಾನದ ಇತಿಹಾಸ ಹೊಂದಿದೆ ಇಲ್ಲಿ 10ಕ್ಕು ಹೆಚ್ಚಿನ 1000 ಸಾವಿರ ಶತಮಾನದ ಜೈನರ ಶಾಸನಗಳು ದೊರೆತಿವೆ 100ಕ್ಕೂ ಹೆಚ್ಚು ಜೈನ ಬಸೀದಿಗಳನ್ನು ಹೊಂದಿದೆ ಎನ್ನುವ ಖ್ಯಾತಿಯನ್ನು ಈ ಗ್ರಾಮ ಪಡೆದಿದೆ. ಅದೆ ರಿತಿಯಾಗಿ ಯಾದವಾಡ ಗ್ರಾಮವು ಸುಮಾರು 5 ಶತಮಾನಗಳ ಇತಿಹಾಸ ಹೊಂದಿದೆ..... ನಗರಾಡಳಿತ ಗೋಕಾಕ್ ನಗರಸಭೆಯು ೧೮೫೩ ರಲ್ಲಿ ಸ್ಥಾಪನೆಗೊಂಡಿದೆ. ಆಗಿನ ಮುಂಬಯಿ ಸರ್ಕಾರ ( ಸದರ್ನ ಪಾಟ್ ಅಫ್ ಮಹಾರಾಷ್ಟ್ರ)ದಲ್ಲಿ ಪುಣೆ ಹಾಗು ಗೋಕಾಕ್ ದಲ್ಲಿ ಎಕಕಾಲಕ್ಕೆ ಈ ಮುನ್ಸಿಪಾಲ್ಟಿಗಳು ಅಸ್ತಿತ್ವಕ್ಕೆ ಬಂದಿವೆ. ಹೀಗಾಗಿ ಇದು ಕರ್ನಾಟಕದ ಹಳೆಯ ಮುನ್ಸಿಪಾಲ್ಟಿಗಳ ಪೈಕಿ ಒಂದೆನಿಸಿದೆ. ಈ ಹಿಂದೆ ಪುರಸಭೆ ಸ್ಥಾನ ಹೊಂದಿದ್ದ ಈ ಸ್ಥಳೀಯಾಡಳಿತವನ್ನು ಕರ್ನಾಟಕ ರಾಜ್ಯ ಸರ್ಕಾರ ೧೯೯೫ ರಲ್ಲಿ ನಗರಸಭೆಯಾಗಿ ಪರಿವರ್ತಿಸಿದೆ. ಒಟ್ಟು ೩೧ ಸದಸ್ಯರು ನಗರದ ವಿವಿಧ ವಾರ್ಡಗಳನ್ನು ಪ್ರತಿನಿಧಿಸುತ್ತಾರೆ. ಗೋಕಾಕ್ ವಿಶೇಷತೆ ಗೋಕಾಕ್ ಪಟ್ಟಣವು ಹಲವಾರು ವೈವಿದ್ಯಮಯ ವಿಷಯಗಳಿಗಾಗಿ ನಾಡಿನಲ್ಲಿ ಹೆಸರು ಮಾಡಿದೆ. ಕಟ್ಟಿಗೆಯ ಹಣ್ಣಿನ ಫಲಕ, ಗೊಂಬೆ ಮುಂತಾದ ಕರಕುಶಲ ವಸ್ತುಗಳು ಇಲ್ಲಿ ತಯಾರಾಗುತ್ತವೆ. ಇನ್ನು ಪ್ರಸಿದ್ದ ಸಿಹಿ ತಿನಿಸು 'ಕರದಂಟು' ಸಹ ಇಲ್ಲಿಯೇ ತಯಾರಾಗುತ್ತದೆ. ಜೊತೆಗೆ ಇತ್ತಿಚಿಗೆ ಲಡಗಿ ಲಾಡು (ಉಂಡಿ) ಸಹ ತಯಾರಿಸಲಾಗುತ್ತಿದ್ದು ಈ ಎರಡು ಸಿಹಿ ತಿನಿಸುಗಳು ಲೋಕ ಪ್ರಸಿದ್ದವಾಗಿವೆ. ಸಾಗರದಾಚೆಗೂ ಇವು ತಮ್ಮ ಕಂಪನ್ನು ಬೀರಿವೆ. ಇನ್ನು ಪಟ್ಟಣ ಜಿಲ್ಲಾ ಕೇಂದ್ರವಾಗುವತ್ತ ದಾಪುಗಾಲಿಟ್ಟಿದೆ. ಈ ಹಿಂದೆ ಸರ್ಕಾರ ನೇಮಿಸಿದ್ದ ಹುಂಡೇಕಾರ್ ಸಮಿತಿ , ಗದ್ದಿಗೌಡರ ಸಮಿತಿಗಳು ನಗರವನ್ನು ಜಿಲ್ಲಾ ಕೇಂದ್ರಕ್ಕೆ ಶಿಫಾರಸ್ಸು ಮಾಡಿವೆ. ಆದ್ರೆ ಬೆಳಗಾವಿ ಗಡಿ ವಿವಾದ ಇದಕ್ಕೆ ಅಡ್ಡಿಯಾಗಿದೆ. ವಿಚಿತ್ರ ಅಂದ್ರೆ ಗೋಕಾಕ್ ನಗರ ಆಯಕಟ್ಟಿನ ಸ್ಥಾನದಲ್ಲಿದ್ದರೂ ಸರ್ಕಾರ ಜಿಲ್ಲಾ ವಿಂಗಡನೆಗೆ ಮೀನಮೇಷ ಎಣಿಸುತ್ತಿದೆ. ಇನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಇಲ್ಲಿಯ ಕೊಡುಗೆ ಅಪಾರ. ಕನ್ನಡದ ಖ್ಯಾತ ಸಾಹಿತಿಗಳಾದ, ಕೃಷ್ಣಮೂರ್ತಿ ಪುರಾಣಿಕ, ಬೇಟಗೇರಿ ಕೃಷ್ಣಶರ್ಮ, ಬಸವರಾಜ್‌ ಕಟ್ಟಿಮನಿ, ಪ್ರೊ.ಕೆ.ಜಿ.ಕುಂದಣಗಾರ್, ಮುಂತಾದ ಹಿರಿಕರು ಈ ಗೋಕಾವಿ ನಾಡಿಗೆ ಸೇರಿದವರಾಗಿದ್ದಾರೆ. ಅಖಿಲ ಭಾರತ ಕನ್ನಡ ಸಾಹಿತ್ಯ ಪರೀಷತ್ ತಾಲ್ಲೂಕು ಘಟಕ ಗೋಕಾಕ ಗೌರವಾಧ್ಯಕ್ಷರು ಪ್ರೊ. ಚಂದ್ರಶೇಖರ ಅಕ್ಕಿ, ಅಧ್ಯಕ್ಷರು ಶ್ರೀ ಮಹಾಂತೇಶ ತಾಂವಶಿ, ನಿಕಟಪೂರ್ವ ಅಧ್ಯಕ್ಷರು ಶ್ರೀ ಬಾಲಶೇಖರ ಬಂದಿ, ಕಾರ್ಯದರ್ಶಿಗಳು ಸಿದ್ರಾಮ ದ್ಯಾಗಾನಟ್ಟಿ ಮತ್ತು ಶ್ರೀಮತಿ ರಜನಿ ಜಿರಗ್ಯಾಳ, ಕೋಶಾಧ್ಯಕ್ಷರು ಆನಂದ ಗೋಟಡಕಿ. ಸದಸ್ಯರು ಈಶ್ವರ ಬೆಟಗೇರಿ, ಪ್ರೊ. ಶಂಕರ ನಿಂಗನೂರ, ಬಸವರಾಜ ಮುರಗೋಡ, ಎಸ್.ಆರ್.ಮುದ್ದಾರ,ಸಚಿನ್ ಕಡಬಡಿ, ಡಾ. ಎಸ್.ಬಿ.ಹೊಸಮನಿ, ಬಿ.ಬಿ.ಇಟ್ಟನ್ನವರ, ಬಸವರಾಜ ಹಣಮಂತಗೋಳ, ಶೈಲಾ ಕೊಕರಿ, ಮಹಾದೇವ ಮಲಗೌಡ, ಎಸ್.ಎಸ್.ಪಾಟೀಲ,ಎಸ್.ಕೆ.ಮಠದ, ಶ್ರೀಮತಿ ರಾಜೇಶ್ವರಿ ವಡೆಯರ. ರೈಲು ನಿಲ್ದಾಣ ಗೊಕಾಕ್ ರೈಲು ನಿಲ್ದಾಣವು ಪಟ್ಟಣ ದಿಂದ ೧೦ ಕಿ.ಮಿ ಅಂತರದಲ್ಲಿ ಇದೆ...ಇದು ಬೆಳಗಾವಿ ಜಿಲ್ಲೆಯ ೫ನೇ ದೊಡ್ಡ ನಿಲ್ದ್ದಾಣ. ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಲ್ಲಿ ಈ ರೈಲು ನಿಲ್ದಾಣವು ಬರುತ್ತದೆ. ಈ ನಿಲ್ದಾಣದ ಪಕ್ಕದಲ್ಲಿ ಕೊಣ್ಣೂರು ಎಂಬ ಉಪ ನಗರವು ಬರುತ್ತದೆ. ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರು ಇರುವುದರಿಂದ ಸದಾ ಜನಜಂಗುಳಿಯಿಂದ ತುಂಬಿರುತ್ತದೆ.ನಿಲ್ದಾಣದ ಉತ್ತರಕ್ಕೆ ಘಟಪ್ರಭಾ ಮತ್ತು ದಕ್ಶಿಣಕ್ಕೆ ಪಾಶ್ಚಪೂರ ರೈಲು ನಿಲ್ದಾಣಗಳು ಬರುತ್ತವೆ.ಇದನ್ನು ಗೋಕಾಕ್ ರೋಡ್ ನಿಲ್ದಾಣವೆಂದು ಕರೆಯುತ್ತಾರೆ.ಪ್ರೆಕ್ಶಣಿಯ ಸ್ಥಳಗಳಾದ ಗೊಕಾಕ್ ಜಲಪಾತ, ಗೊಡಚನಮಲ್ಕಿ ಜಲಪಾತ, ಘಟಪ್ರಭಾ ಪಕ್ಶಿದಾಮ, ದುಪದಾಳ ಹಾಗು ಹಿಡಕಲ್ ಜಲಾಶಯ, ಯೊಗಿಕೊಳ್ಳ ನಿಸರ್ಗದಾಮ ( ಗೊಕಾಕ್ ನವಿಲುದಾಮ) ಕಲ್ಲೋಳಿಯ ಹನುಮಂತ ದೇವರ ದೇವಸ್ಥಾನ ಮತ್ತು ಕಲ್ಲೋಳಿಯ ಪಾರ್ಶ್ವಾನಾಥ ಜೈನ್ ಬಸಿದಿ ಹಾಗೂ 1000 ಶತಮಾನದ ಶಾಸನಗಳು ಇಲ್ಲಿ ಸಿಗುತ್ತವೆ, ಮುಂತಾದ ಸ್ಥಳಗಳಿಗೆ ಹೋಗುವವರು ಇಲ್ಲಿ ಇಳಿಯಬಹುದಾಗಿದೆ. ನಿಲುಗಡೆ ಇರುವ ರೈಲುಗಳು ಮಿರಜ್ - ಬೆಳಗಾವಿವ ( ಪ್ಯಾಸೆಂಜರ್) ಮಿರಜ್ - ಕ್ಯಾಸಲರಾಕ್ " " ಮಿರಜ್ - ಲೋಂಡಾ " " ಮಿರಜ್ - ಬಳ್ಳಾರಿ " " ಕೊಲ್ಹಾಪುರ - ಬೆಂಗಳೂರು ( ರಾಣಿ ಚೆನ್ನಮಾ ಎಕ್ಸ್ ಪ್ರೆಕ್ಸ) ಯಶವಂತಪುರ - ದಾದರ ( ಚಾಲುಕ್ಯ ಎಕ್ಸ್ ಪ್ರೆಕ್ಸ)ಸದ್ಯಕ್ಕೆ ನಿಲುಗಡೆ ಇಲ್ಲ. ಕ್ಯಾಸಲರಾಕ್ - ಮಿರಜ್ ( ಪ್ಯಾಸೆಂಜರ್) ಲೋಂಡಾ - ಮಿರಜ್ " " ಬೆಳಗಾವಿವ - ಮಿರಜ್ " " ಬೆಳಗಾವಿವ - ಮಿರಜ್ ಪುಶ ಪುಲ್ ಬೆಂಗಳೂರು - ಕೊಲ್ಹಾಪುರ( ರಾಣಿ ಚೆನ್ನಮಾ ಎಕ್ಸ್ ಪ್ರೆಕ್ಸ) ದಾದರ - ಯಶವಂತಪುರ ( ಚಾಲುಕ್ಯ ಎಕ್ಸ್ ಪ್ರೆಕ್ಸ) ರಾಜಕೀಯ ರಮೇಶ ಜಾರಕಿಹೊಳಿ,ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಇಲ್ಲಿನ ರಾಜಕಾರಣಿಗಳು. ಉಲ್ಲೇಖಗಳು ಉಲ್ಲೇಖಗಳು ಬೆಳಗಾವಿ ಜಿಲ್ಲೆಯ ತಾಲೂಕುಗಳು
1113
https://kn.wikipedia.org/wiki/%E0%B2%AF%E0%B3%81.%E0%B2%86%E0%B2%B0%E0%B3%8D.%E0%B2%85%E0%B2%A8%E0%B2%82%E0%B2%A4%E0%B2%AE%E0%B3%82%E0%B2%B0%E0%B3%8D%E0%B2%A4%E0%B2%BF
ಯು.ಆರ್.ಅನಂತಮೂರ್ತಿ
ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು. ಇಂಗ್ಲೀಷ್ ಪ್ರಾಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅವರು ಅನಂತರ ಶಿಕ್ಷಣ ಸೇರಿದಂತೆ ಮುಂತಾದ ಕ್ಷೇತ್ರಗಳಲ್ಲಿ ಅನೇಕ ಮುಖ್ಯ ಹುದ್ದೆಗಳನ್ನು ನಿರ್ವಹಿಸಿದರು. ಅವರು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಜನಿಸಿದರು ಮತ್ತು ನವ ಚಳುವಳಿಯ ಪ್ರವರ್ತಕರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಇವರ ಸಮಗ್ರ ಸಾಹಿತ್ಯಕ್ಕಾಗಿ ೧೯೯೪ರಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದರು ,ಕನ್ನಡ ಭಾಷೆಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿರುವ ಆರನೇ ಬರಹಗಾರರಾಗಿದ್ದಾರೆ. ಈ ಪ್ರಶಸ್ತಿಯು ಭಾರತದಲ್ಲಿ ನೀಡಲ್ಪಟ್ಟ ಅತ್ಯುನ್ನತ ಗೌರವವಾಗಿದೆ. ೧೯೯೮ ರಲ್ಲಿ ಇವರು ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದರು. ೧೯೮೦ ರ ದಶಕದ ಅಂತ್ಯದಲ್ಲಿ ಕೇರಳದ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದರು. ಅವರು ೨೦೧೩ ರ ಮ್ಯಾನ್ ಬುಕರ್ ಅಂತರರಾಷ್ಟ್ರೀಯ ಪ್ರಶಸ್ತಿಯ ಅಂತಿಮ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು. ಜನನ ಅನಂತಮೂರ್ತಿಯವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ 'ಮೇಳಿಗೆ' ಹಳ್ಳಿಯಲ್ಲಿ, ೧೯೩೨ರ ಡಿಸೆಂಬರ್ ೨೧ರಂದು. ತಂದೆ ಉಡುಪಿ ರಾಜಗೋಪಾಲಾಚಾರ್ಯ, ತಾಯಿ ಸತ್ಯಮ್ಮ (ಸತ್ಯಭಾಮ). ವಿದ್ಯಾಭ್ಯಾಸ 'ದೂರ್ವಾಸಪುರ'ದ ಸಾಂಪ್ರದಾಯಿಕ ಸಂಸ್ಕೃತ ಪಾಠಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಆರಂಭಿಸಿದ ಅನಂತಮೂರ್ತಿಯವರ ಓದು ಅನಂತರ ತೀರ್ಥಹಳ್ಳಿ, ಮೈಸೂರುಗಳಲ್ಲಿ ಮುಂದುವರೆಯಿತು. ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಸಾಹಿತ್ಯದಲ್ಲಿ ಎಂ.ಎ ಪದವಿ ಪಡೆದ ಇವರು ಹೆಚ್ಚಿನ ವ್ಯಾಸಂಗಕ್ಕಾಗಿ ಇಂಗ್ಲೆಂಡಿಗೆ ಹೋದರು. ಕಾಮನ್‍ವೆಲ್ತ್ ವಿದ್ಯಾರ್ಥಿ ವೇತನ ಪಡೆದ ಇವರು ಬರ್ಮಿಂಗ್‍ಹ್ಯಾಮ್ ವಿಶ್ವವಿದ್ಯಾನಿಲಯದಿಂದ ಇಂಗ್ಲೀಷ್ ಮತ್ತು ತೌಲನಿಕ ಸಾಹಿತ್ಯ ಎಂಬ ವಿಷಯದಲ್ಲಿ ೧೯೬೬ರಲ್ಲಿ ಪಿಎಚ್.ಡಿ ಪದವಿ ಪಡೆದರು."ಋಜುವಾತು "ಪತ್ರಿಕೆಯನು ಪ್ರಾರಂಭಿಸಿದರು. ವೃತ್ತಿ ಜೀವನ ಅನಂತಮೂರ್ತಿ ೧೯೭೦ ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಪ್ರಾಧ್ಯಾಪಕ ಮತ್ತು ಬೋಧಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರು ೧೯೮೭ ರಿಂದ ೧೯೯೧ ರವರೆಗೆ ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದರು. ಅವರು ೧೯೯೨ ರವರೆಗೆ ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ೧೯೯೩ ರಲ್ಲಿ ಅವರು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದರು. ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ, ಟಬಿಂಗನ್ ವಿಶ್ವವಿದ್ಯಾಲಯ, ಅಯೋವಾ ವಿಶ್ವವಿದ್ಯಾಲಯ, ಟಫ್ಟ್ಸ್ ವಿಶ್ವವಿದ್ಯಾಲಯ ಮತ್ತು ಶಿವಾಜಿ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಭಾರತೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು.ಅನಂತಮೂರ್ತಿ ಎರಡು ಬಾರಿ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ೨೦೧೨ ರಲ್ಲಿ ಅವರನ್ನು ಕರ್ನಾಟಕದ ಕೇಂದ್ರ ವಿಶ್ವವಿದ್ಯಾಲಯದ ಮೊದಲ ಕುಲಪತಿಯನ್ನಾಗಿ ನೇಮಿಸಲಾಯಿತು. ಅನಂತಮೂರ್ತಿ ದೇಶದಲ್ಲಿ ಮತ್ತು ಹೊರಗಡೆ ಹಲವಾರು ಸೆಮಿನಾರ್‌ಗಳಲ್ಲಿ ಬರಹಗಾರ ಮತ್ತು ವಾಗ್ಮಿಗಳಾಗಿ ಉಪನ್ಯಾಸಗಳನ್ನು ನೀಡಿದ್ದಾರೆ. ಅವರು ಭಾರತೀಯ ಬರಹಗಾರರ ಸಮಿತಿಯ ಸದಸ್ಯರಾಗಿದ್ದರು ಮತ್ತು ೧೯೯೦ ರಲ್ಲಿ ಸೋವಿಯತ್ ಒಕ್ಕೂಟ, ಹಂಗೇರಿ, ಫ್ರಾನ್ಸ್ ಮತ್ತು ಪಶ್ಚಿಮ ಜರ್ಮನಿಯಂತಹ ದೇಶಗಳಿಗೆ ಭೇಟಿ ನೀಡಿದರು. ಸೋವಿಯತ್ ಪತ್ರಿಕೆಯೊಂದರ ಮಂಡಳಿಯ ಸದಸ್ಯರಾಗಿ ೧೯೮೯ ರಲ್ಲಿ ಮಾಸ್ಕೋಗೆ ಭೇಟಿ ನೀಡಿದರು. ೧೯೯೩ ರಲ್ಲಿ ಚೀನಾಕ್ಕೆ ಭೇಟಿ ನೀಡಿದ ಬರಹಗಾರರ ಸಮಿತಿಯ ನಾಯಕ ಅನಂತಮೂರ್ತಿ. ಕೃತಿಗಳು ಕಥಾ ಸಂಕಲನ ಎಂದೆಂದೂ ಮುಗಿಯದ ಕತೆ (೧೯೫೫) ಪ್ರಶ್ನೆ (೧೯೬೩) ಮೌನಿ (೧೯೭೨) ಆಕಾಶ ಮತ್ತು ಬೆಕ್ಕು (೨೦೦೧) ಕ್ಲಿಪ್ ಜಾಯಿಂಟ್ ಘಟಶ್ರಾದ್ಧ ಸೂರ್ಯನ ಕುದುರೆ (೧೯೮೧) ಪಚ್ಚೆ ರೆಸಾರ್ಟ್ (೨೦೧೧) ಬೇಟೆ, ಬಳೆ ಮತ್ತು ಓತಿಕೇತ ಎರಡು ದಶಕದ ಕತೆಗಳು ಮೂರು ದಶಕದ ಕಥೆಗಳು (೧೯೮೯) ಐದು ದಶಕದ ಕತೆಗಳು (೨೦೦೨) ಕಾದಂಬರಿಗಳು ಸಂಸ್ಕಾರ (೧೯೬೫) ಭಾರತೀಪುರ (೧೯೭೩) ಅವಸ್ಥೆ (೧೯೭೮) ಭವ (೧೯೯೪) ದಿವ್ಯ (೨೦೦೧) ಪ್ರೀತಿ ಮೃತ್ಯು ಮತ್ತು ಭಯ (೨೦೧೨) ವಿಮರ್ಶೆ ಮತ್ತು ಪ್ರಬಂಧ ಸಂಕಲನ ಪ್ರಜ್ಞೆ ಮತ್ತು ಪರಿಸರ (೧೯೭1) ಪೂರ್ವಾಪರ (೧೯೮೦) ಸಮಕ್ಷಮ (೧೯೮೦) ಸನ್ನಿವೇಶ (೧೯೭೪) ಯುಗಪಲ್ಲಟ (೨೦೦೧) ವಾಲ್ಮೀಕಿಯ ನೆವದಲ್ಲಿ (೨೦೦೬) ಮಾತು ಸೋತ ಭಾರತ (೨೦೦೭) ಸದ್ಯ ಮತ್ತು ಶಾಶ್ವತ (೨೦೦೮) ಬೆತ್ತಲೆ ಪೂಜೆ ಏಕೆ ಕೂಡದು (೧೯೯೯) ಋಜುವಾತು (೨೦೦೭) ಶತಮಾನದ ಕವಿ ಯೇಟ್ಸ್ (೨೦೦೮) ಕಾಲಮಾನ (೨೦೦೯) ಮತ್ತೆ ಮತ್ತೆ ಬ್ರೆಕ್ಟ್ (೨೦೦೯) ಶತಮಾನದ ಕವಿ ವರ್ಡ್ಸ್ ವರ್ತ್ (೨೦೦೯) ಶತಮಾನದ ಕವಿ ರಿಲ್ಕೆ (೨೦೦೯) ರುಚಿಕರ ಕಹಿಸತ್ಯಗಳ ಕಾಲ (೨೦೧೧) ಆಚೀಚೆ (೨೦೧೧) ನಾಟಕ ಆವಾಹನೆ (೧೯೬೮) ಕವನ ಸಂಕಲನ ಹದಿನೈದು ಪದ್ಯಗಳು (೧೯೬೭) ಮಿಥುನ (೧೯೯೨) ಅಜ್ಜನ ಹೆಗಲ ಸುಕ್ಕುಗಳು (೧೯೮೯) ಅಭಾವ (೨೦೦೯) ಸಮಸ್ತ ಕಾವ್ಯ (೨೦೧೨) ಆತ್ಮಕತೆ ಸುರಗಿ (೨೦೧೨) ಮೊಳಕೆ (ಅಮಿತನ ಆತ್ಮಚರಿತ್ರೆ) ಚಲನಚಿತ್ರವಾದ ಕೃತಿಗಳು ಘಟಶ್ರಾದ್ಧ ಸಂಸ್ಕಾರ ಬರ ಅವಸ್ಥೆ ಮೌನಿ (ಸಣ್ಣಕಥೆ) ದೀಕ್ಷಾ (ಹಿಂದಿ ಚಿತ್ರ) ಪ್ರಕೃತಿ (ಸಣ್ಣಕಥೆ) ಪ್ರಮುಖ ಉಪನ್ಯಾಸಗಳು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣ, ತುಮಕೂರು, 2002 ಫ್ರೆಂಚ್ ಸಾಹಿತ್ಯ ಉತ್ಸವ, 2002 ಬರ್ಲಿನ್ ಸಾಹಿತ್ಯ ಉತ್ಸವ, 2002 ಕರ್ನಾಟಕವನ್ನು ಕುರಿತ ವಿಚಾರ ಸಂಕಿರಣ, ಅಯೋವಾ ವಿವಿ, 1997 ಭಾರತವನ್ನು ಕುರಿತ ವಿಚಾರ ಸಂಕಿರಣ, ಬರ್ಲಿನ್, ಜರ್ಮನಿ, 1997 'ದಿ ವರ್ಡ್ ಆ್ಯಸ್ ಮಂತ್ರ: ಎ ಸೆಲೆಬ್ರೇಷನ್ ಆಫ್ ರಾಜಾರಾವ್' ವಿಚಾರ ಸಂಕಿರಣ, ಟೆಕ್ಸಾಸ್ ವಿವಿ, 1997 'ಟ್ರಾನ್ಸ್‌ಲೇಟಿಂಗ್ ಸೌತ್ ಏಷ್ಯನ್ ಲಿಟರೇಚರ್' ವಿಚಾರ ಸಂಕಿರಣ, ಲಂಡನ್, 1993 ಭಾರತೀಯ ಲೇಖಕರ ನಿಯೋಗದ ಮುಖ್ಯಸ್ಥ, ಚೀನಾ, 1993 ಗಾಂಧಿ ಸ್ಮಾರಕ ಉಪನ್ಯಾಸ, ರಾಜಘಾಟ್, ವಾರಣಾಸಿ, 1989 'ಮಾರ್ಕ್ಸಿಸಂ ಅಂಡ್ ಲಿಟರೇಚರ್', ಅಂಗನ್‌ಗಲ್ ಸ್ಮಾರಕ ಉಪನ್ಯಾಸ, ಮಣಿಪುರ, 1976. ಪ್ರಶಸ್ತಿ ಮತ್ತು ಪುರಸ್ಕಾರಗಳು ಕೃಷ್ಣರಾವ್ ಚಿನ್ನದ ಪದಕ (೧೯೫೮) ಸಂಸ್ಕಾರ, ಘಟಶ್ರಾದ್ಧ ಮತ್ತು ಬರ ಚಿತ್ರಗಳಿಗೆ ಅತ್ಯುತ್ತಮ ಕತೆಗಾಗಿ ಪ್ರಶಸ್ತಿ (ಕ್ರಮವಾಗಿ ೧೯೭೦, ೧೯೭೮, ೧೯೮೯) ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (೧೯೮೩) ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (೧೯೮೪) ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮಾಸ್ತಿ ಪ್ರಶಸ್ತಿ (೧೯೯೪) ಜ್ಞಾನಪೀಠ ಪ್ರಶಸ್ತಿ (೧೯೯೪) ಬಷೀರ್ ಪುರಸ್ಕಾರ, ಕೇರಳ ಸರ್ಕಾರ (೨೦೧೨) ರವೀಂದ್ರ ಟ್ಯಾಗೋರ್ ಸ್ಮಾರಕ ಪದಕ (೨೦೧೨) ಗಣಕ ಸೃಷ್ಟಿ ಪ್ರಶಸ್ತಿ, ಕೋಲ್ಕತ (೨೦೦೨) ಪದ್ಮಭೂಷಣ (೧೯೯೮) ಶಿಖರ್ ಸಮ್ಮಾನ್ (ಹಿಮಾಚಲ ಪ್ರದೇಶ ಸರ್ಕಾರ) (೧೯೯೫) ೬೯ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ (ತುಮಕೂರು) ನಿಧನ ಡಾ.ಅನಂತ ಮೂರ್ತಿಯವರು ೨೦೦೨ರಿಂದ ಮೂತ್ರಪಿಂಡದ ಕಾಯಿಲೆಯಿಂದ ನರಳುತ್ತಿದ್ದರು. ಜೊತೆಗೆ ಸಕ್ಕರೆ ಕಾಯಿಲೆ ಕಾಡುತ್ತಿತ್ತು. ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ 'ಮಣಿಪಾಲ್ ಆಸ್ಪತ್ರೆ'ಯಲ್ಲಿ ೧೦ ದಿನಗಳ ಕಾಲ ಚಿಕಿತ್ಸೆ ಪಡೆದು ಗುಣಹೊಂದದೆ ಮೂತ್ರಪಿಂಡ ವೈಫ಼ಲ್ಯ ಹಾಗು ಲಘು ಹೃದಯಾಘಾತದಿಂದ 2014ರ ಆಗಸ್ಟ್ 22ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬೆಂಗಳೂರಿನ ಡಾಲರ್ ಕಾಲೊನಿಯಲ್ಲಿ ವಾಸಿಸುತ್ತಿದ್ದ ಮೂರ್ತಿಯವರ ಅಂತಿಮ ಸಂಸ್ಕಾರ, ಬೆಂಗಳೂರಿನ 'ಜ್ಞಾನಭಾರತಿ ಕಲಾಗ್ರಾಮ'ದಲ್ಲಿ2014ರ ಆಗಸ್ಟ್ 23 ನೆಯ ತಾರೀಖಿನ ಮಧ್ಯಾಹ್ನ ಸುಮಾರು ೪ ಗಂಟೆಗೆ ಜರುಗಿತು. ಮೂರ್ತಿಯವರು ಪತ್ನಿ ಎಸ್ತರ್, ಮಗ ಶರತ್ ಮತ್ತು ಮಗಳು ಅನುರಾಧರನ್ನು ಆಗಲಿದ್ದಾರೆ. ಒಂದಿಷ್ಟು ಹೆಚ್ಚಿನ ಮಾಹಿತಿಗಳು ೧೯೫೫ರಲ್ಲಿ ಎಂದೆಂದೂ ಮುಗಿಯದ ಕತೆ ಕಥಾ ಸಂಕಲನದಿಂದ ಅವರ ಸಾಹಿತ್ಯ ಕೃಷಿ ಆರಂಭವಾಯಿತು. ೧೯೬೫ರಲ್ಲಿ ಮೊದಲ ಕಾದಂಬರಿ ಸಂಸ್ಕಾರ ಪ್ರಕಟವಾಯಿತು. ಇದು ವ್ಯಾಪಕ ಚರ್ಚೆಗೆ ಒಳಗಾದ ಕಾದಂಬರಿ. ಈ ಕಾದಂಬರಿ ಭಾರತದ ಹಲವು ಭಾಷೆಗಳಲ್ಲದೆ, ಇಂಗ್ಲಿಷ್, ರಷ್ಯನ್, ಫ್ರೆಂಚ್, ಜರ್ಮನ್, ಹಂಗೇರಿಯನ ಮತ್ತಿತರ ಭಾಷೆಗಳಿಗೆ ಅನುವಾದವಾಗಿದೆ. ಯು.ಆರ್.ಅನಂತಮೂರ್ತಿಯವರ ಮೊದಲ ಕಾದಂಬರಿ ಸಂಸ್ಕಾರ ಎಂದೇ ಎಲ್ಲರೂ ಭಾವಿಸಿದ್ದರು. ಅದಕ್ಕೂ ಮೊದಲೇ ಅನಂತಮೂರ್ತಿ ೧೯೫೮ ರಲ್ಲಿ ಬರೆದು ಪ್ರಕಟವಾಗಿರದಿದ್ದ ಪ್ರೀತಿ-ಮೃತ್ಯು-ಭಯ ಎಂಬ ಕಾದಂಬರಿ ೨೦೧೨ ಜೂನ್ ೧೦ಕ್ಕೆ ಬಿಡುಗಡೆಯಾಯಿತು. ಇಂಗ್ಲೀಷಿನಲ್ಲಿ ಇವರು ಬರೆದಿರುವ ಹಲವಾರು ಪ್ರಬಂಧಗಳು ದೇಶ-ವಿದೇಶಗಳ ಸಾಹಿತ್ಯಕ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಹಿರಿಯ ಸಮಾಜವಾದಿ ರಾಜಕಾರಣಿ ಜೆ. ಎಚ್. ಪಟೇಲರ ಸಮೀಪವರ್ತಿಯಾಗಿದ್ದ ಅನಂತಮೂರ್ತಿ ಅವರು ಶಾಂತವೇರಿ ಗೋಪಾಲಗೌಡ ಮತ್ತು ಲೋಹಿಯಾ ಅವರ ಪ್ರಭಾವಕ್ಕೆ ಒಳಗಾದವರು. ಇವರ ಬರಹದಲ್ಲಿ ಈ ಇಬ್ಬರ ಪ್ರಭಾವಗಳು ಎದ್ದು ಕಾಣುತ್ತವೆ. ೧೯೮೧ರಲ್ಲಿ ರಾಜಕೀಯ, ಸಾಂಸ್ಕೃತಿಕ ಮತ್ತು ಸಾಹಿತ್ಯಕ ವಿಷಯಗಳಿಗೆಂದು ಋಜುವಾತು ಎಂಬ ತ್ರೈಮಾಸಿಕ ಪತ್ರಿಕೆಯನ್ನು ಪ್ರಾರಂಭಿಸಿದರು. ಅನಂತಮೂರ್ತಿಯವರ ಹಲವು ಕತೆಗಳು ಕನ್ನಡ ಸಾಹಿತ್ಯ ವಿಮರ್ಶಕರ ಗಮನ ಸೆಳೆದಿವೆ ಮತ್ತು ಚರ್ಚೆಗೂ ವಿವಾದಕ್ಕೂ ಒಳಗಾಗಿವೆ. ಸೂರ್ಯ ಕುದುರೆ, ನವಿಲುಗಳು, ಬರ, ಘಟಶ್ರಾದ್ಧ, ತಾಯಿ, ಹುಲಿಯ ಹೆಂಗರಳು ಈ ಸಾಲಿಗೆ ಸೇರುತ್ತವೆ. ಅನಂತಮೂರ್ತಿಯವರ ಸಂಸ್ಕಾರ, ಅವಸ್ಥೆ ಕಾದಂಬರಿಗಳನ್ನು ಮತ್ತು ಬರ, ಘಟಶ್ರಾದ್ಧ ಕತೆಗಳನ್ನು ಆಧರಿಸಿ ಚಲನಚಿತ್ರಗಳು ನಿರ್ಮಾಣವಾಗಿವೆ. ಇವೆಲ್ಲವೂ ಮಹತ್ವದ ಚಿತ್ರಗಳಾಗಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದಿವೆ. ಸಂಸ್ಕಾರ ಮತ್ತು ಘಟಶ್ರಾದ್ಧ ಚಲನಚಿತ್ರಗಳು ಭಾರತ ಸರಕಾರದಿಂದ ಸ್ವರ್ಣಕಮಲ ಪ್ರಶಸ್ತಿಯನ್ನು ಪಡೆದಿವೆ. ಘಟಶ್ರಾದ್ಧ ಕತೆಯನ್ನು ಆಧರಿಸಿ ದೀಕ್ಷಾ ಎಂಬ ಹಿಂದಿ ಚಲನಚಿತ್ರವೂ ತಯಾರಾಗಿದೆ. ಬರಹಗಾರರಾಗಿ, ಭಾಷಣಕಾರರಾಗಿ ಅನಂತಮೂರ್ತಿಯವರು ದೇಶದ ಒಳಗೆ ಮತ್ತು ಹೊರಗೆ ಹಲವಾರು ಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ, ಉಪನ್ಯಾಸ ನೀಡಿದ್ದಾರೆ. ೧೯೮೦ರಲ್ಲಿ ಸೋವಿಯತ್ ರಷ್ಯಾ, ಹಂಗೇರಿ, ಪಶ್ಚಿಮ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಿಗೆ ಭೇಟಿ ನೀಡಿದ ಭಾರತೀಯ ಲೇಖಕರ ಬಳಗದ ಸದಸ್ಯರಾಗಿದ್ದರು. ಮಾರ್ಕ್ಸ್‌ವಾದದಿಂದ ಬಹಳ ಪ್ರಭಾವಿತರಾಗಿದ್ದ ಇವರು ತಮ್ಮ ಹಲವಾರು ಅಭಿಪ್ರಾಯಗಳನ್ನು ಪರೀಕ್ಷಿಸಿ ನೋಡಲು ಈ ಭೇಟಿ ನೆರವಾಯಿತು. ಸೋವಿಯತ್ ಪತ್ರಿಕೆಯೊಂದರ ಸಲಹಾ ಸಮಿತಿಯ ಸದಸ್ಯರಾಗಿ ೧೯೮೯ರಲ್ಲಿ ಮಾಸ್ಕೋಗೆ ಭೇಟಿ ನೀಡಿದರು. ೧೯೯೩ರಲ್ಲಿ ಚೀನಾ ದೇಶಕ್ಕೆ ಭೇಟಿ ನೀಡಿದ ಭಾರತೀಯ ಬರಹಗಾರರ ಬಳಗಕ್ಕೆ ಇವರು ನಾಯಕರಾಗಿದ್ದರು. ಇವಲ್ಲದೆ ದೇಶ ವಿದೇಶಗಳ ಹಲವಾರು ವೇದಿಕೆಗಳಿಂದ ನೂರಕ್ಕೂ ಹೆಚ್ಚು ಉಪನ್ಯಾಸ ನೀಡಿದ್ದಾರೆ. ಅನಂತಮೂರ್ತಿಯವರು ಕನ್ನಡದ ಹಲವಾರು ಸಾಹಿತ್ಯ ದಿಗ್ಗಜರನ್ನು ರೇಡಿಯೋ ಮತ್ತು ದೂರದರ್ಶನಗಳಲ್ಲಿ ಸಂದರ್ಶಿಸಿದ್ದಾರೆ. ಮೈಸೂರು ಆಕಾಶವಾಣಿಗಾಗಿ ಗೋಪಾಲಕೃಷ್ಣ ಅಡಿಗ, ಶಿವರಾಮ ಕಾರಂತ, ಆರ್.ಕೆ. ನಾರಾಯಣ್, ಆರ್.ಕೆ .ಲಕ್ಷ್ಮಣ್ ಮತ್ತು ಜನರಲ್ ಕಾರಿಯಪ್ಪ ಅವರನ್ನು ಸಂದರ್ಶಿಸಿದ್ದಾರೆ. ಶಿವರಾಮ ಕಾರಂತ, ಗೋಪಾಲಕೃಷ್ಣ ಅಡಿಗ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರುಗಳನ್ನು ಕುರಿತು ದೂರದರ್ಶನವು ನಿರ್ಮಿಸಿದ ಸಾಕ್ಷ್ಯ ಚಿತ್ರಗಳಲ್ಲಿ ಸಂದರ್ಶಕರಾಗಿ ಭಾಗವಹಿಸಿದ್ದಾರೆ. ವಿನಾಯಕ ಕೃಷ್ಣ ಗೋಕಾಕರ ಅನಂತರ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎರಡನೆಯ ಕನ್ನಡಿಗ. ಮ್ಯಾನ್ ಬುಕರ್ ಪ್ರಶಸ್ತಿಗೆ ನಾಮನಿರ್ದೇಶಗೊಂಡ ೧೦ ಸಾಹಿತಿಗಳಲ್ಲಿ ಒಬ್ಬರು. ೧೯೮೦ರ ಗೋಕಾಕ್ ಚಳುವಳಿಯನ್ನು ವಿರೋಧಿಸಿದ ಅನಂತಮೂರ್ತಿ, ಅದನ್ನು ದಂಗೆ ಎಂದು ಕರೆದರು. ೧೯೯೭ರಲ್ಲಿ ಅವರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮನೆ ನೀಡಲಾಯ್ತು. ಅಂದಿನ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ರಿಗೆ ಅನಂತಮೂರ್ತಿಯವರು ಆಪ್ತರಾದುದರಿಂದ ಅದು ವಿವಾದಕ್ಕೆ ಕಾರಣವಾಯಿತು. ಕವಿಗಳಿಗೆ ಸರ್ಕಾರ ನೀಡುವ ನಿವೇಶನವನ್ನು ಹಿಂದಿರುಗಿಸಿದ ನಂತರ ಮನೆ ಪಡೆದದ್ದು ಎಂದು ತಮ್ಮ ಆತ್ಮ ಚರಿತ್ರೆ ಸುರಗಿಯಲ್ಲಿ ಅನಂತಮೂರ್ತಿ ವಿವರಿಸಿದ್ದಾರೆ. ಉಲ್ಲೇಖಗಳು ಹೊರಕೊಂಡಿಗಳು ಡಾ. ಯು.ಆರ್. ಅನಂತಮೂರ್ತಿಯವರ ಕಿರುಪರಿಚಯ -ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ Dr. Udupi Rajagopala Acharya Anantha Murthy - ಉಡುಪಿ ಪೇಜಸ್ ಅನಂತಮೂರ್ತಿಯವರ ಬ್ಲಾಗ್ ಅನಂತಮೂರ್ತಿಯವರ ಸಮಗ್ರ ಸಾಹಿತ್ಯ, ಕಣಜ ತಾಣ 'ಹೊಸಪ್ರಜ್ಞೆಯ ಕತೆಗಾರ ಯು.ಆರ್.ಅನಂತ ಮೂರ್ತಿ, ಮಯೂರ, ೧ ಆಗಸ್ಟ್ ೨೦೧೪, ಸಂದರ್ಶನ, ಎಚ್ಚೆಸ್ಕೆ, ಪುಟ ೮-೧೬ 'The Educated Have Lost Touch With Their Local Almanac' Aug, 20, 2001 OCTOBER 6, 2013 india facts ಯು.ಆರ್.ಅನಂತಮೂರ್ತಿ ಅವರನ್ನು ಕಾಡಿದ ವಿವಾದಗಳು, kannada.oneindia, Saturday, August 23, 2014 'ಯು.ಆರ್.ಅನಂತಮೂರ್ತಿ; ಮತ್ತೆಂದೂ ಮರಳದ ಚೇತನ:ಹೃದಯಶಿವ' ಆಗಸ್ಟ್,೨೫,೨೦೧೪,ಸಂಪಾದಕ,'ಪಂಜು ಇ-ಪತ್ರಿಕೆ' 'ಅನಂತಮೂರ್ತಿ ನಿಧನಕ್ಕೆ ಸಂತಾಪ ಸೂಚಿಸಿದ ಮೋದಿ' 'One India Kannada, August 22, 2014 ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ೧೯೩೨ ಜನನ ಲೇಖಕರು ಕನ್ನಡ ಕವಿಗಳು ಪ್ರೋಜೆಕ್ಟ್ ಟೈಗರ್-೨ ಸ್ಪರ್ಧೆಗಾಗಿ ವಿಸ್ತರಿಸಿದ ಲೇಖನ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ನಾಡೋಜ ಪ್ರಶಸ್ತಿ ಪುರಸ್ಕೃತರು
1117
https://kn.wikipedia.org/wiki/%E0%B2%97%E0%B2%BF%E0%B2%B0%E0%B3%80%E0%B2%B6%E0%B3%8D%20%E0%B2%95%E0%B2%BE%E0%B2%B0%E0%B3%8D%E0%B2%A8%E0%B2%BE%E0%B2%A1%E0%B3%8D
ಗಿರೀಶ್ ಕಾರ್ನಾಡ್
ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ. ಜೀವನ ಗಿರೀಶ ಕಾರ್ನಾಡ್‌ರು ೧೯೩೮ ಮೇ ೧೯ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ॥ ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ॥ ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊಂಡರು. ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ ೫ ವರ್ಷದ ಮಗ ವಸಂತನ ತಾಯಿ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು. ಸಮಾಜ ಏನೆನ್ನುತ್ತದೆ ಅನ್ನುವುದಕ್ಕಿಂತ ಆದರ್ಶ ಹಾಗೂ ಪ್ರಗತಿಪರತೆ ರಘುನಾಥ್ ಕಾರ್ನಾಡರಲ್ಲಿ ಕಂಡು ಬರುತ್ತದೆ. ಮುಂದೆ ಕಾರ್ನಾಡರಿಗೆ ಇಂಥ ಪ್ರಗತಿಪರ ವಾತಾವರಣವೇ ಅವರ ಬೆಳವಣಿಗೆಯಲ್ಲಿ ಸಹಾಯಕವಾಯಿತು. ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಆಯಿತು. ಆ ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ. ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರ್ತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು. ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು. ಇವರು ಕನ್ನಡವಲ್ಲದೆ ಹಿಂದಿ, ಪಂಜಾಬಿ, ಮರಾಠಿ ಹಾಗೂ ಭಾರತೀಯ ಹಲವು ಭಾಷೆಗಳಿಗೆ ತಮ್ಮ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡವು. ಆಕ್ಸ್‌ಫರ್ಡ್‌ನಿಂದ ಬಂದ ನಂತರ ಮದ್ರಾಸ್‌ನಲ್ಲಿ ಆಕ್ಸ್ ಫ಼ರ್ಡ್ ಯೂನಿವರ್ಸಿಟಿ ಪ್ರೆಸ್ ನಲ್ಲಿ ಸಂಪಾದಕರಾಗಿ ನೌಕರಿಯಲ್ಲಿದ್ದು, ಅದನ್ನು ತೊರೆದು ಧಾರವಾಡಕ್ಕೆ ವಾಪಾಸಾಗಿ ನಾಟಕ ಕ್ಷೇತ್ರದಲ್ಲಿ ಕೃಷಿ ನಡೆಸಿದರು. ನಾಟಕ ರಚನೆ ಇಂಗ್ಲೆಂಡಿಗೆ ತೆರಳುವ ಮೊದಲೆ ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ ಯಯಾತಿ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‍ನ ನಿರ್ದೇಶಕರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ಅಲ್ಲಿಂದ ರಚಿತವಾದ ಅವರ ನಾಟಕಗಳು-ಅಂಜು ಮಲ್ಲಿಗೆ, ನಾಗಮಂಡಲ, ತಲೆದಂಡ ಹಾಗೂ ಅಗ್ನಿ ಮತ್ತು ಮಳೆ. ನಾಟಕಗಳು ಮಾ ನಿಷಾಧ - ಏಕಾಂಕ ನಾಟಕ ಯಯಾತಿ - ೧೯೬೧ ತುಘಲಕ್ - ೧೯೬೪ ಹಯವದನ - ೧೯೭೨(ನಾಟ್ಯರಂಗ ಪ್ರಶಸ್ತಿ ) ಅಂಜುಮಲ್ಲಿಗೆ - ೧೯೭೭ ಹಿಟ್ಟಿನ ಹುಂಜ ಅಥವಾ ಬಲಿ - ೧೯೮೦ ನಾಗಮಂಡಲ - ೧೯೯೦ ತಲೆದಂಡ - ೧೯೯೩ ಅಗ್ನಿ ಮತ್ತು ಮಳೆ - ೧೯೯೫ ಟಿಪ್ಪುವಿನ ಕನಸುಗಳು - ೧೯೯೭ ಒಡಕಲು ಬಿಂಬ - ೨೦೦೫ ಮದುವೆ ಅಲ್ಬಮ್ ಫ್ಲಾವರ್ಸ - ೨೦೧೨ ಬೆಂದ ಕಾಳು ಆನ್ ಟೋಸ್ಟ- ೨೦೧೨ ಬ್ರಿಟಿಷ್ ಬ್ರಾಡ್‍ಕಾಸ್ಟಿಂಗ್ ಕಾರ್ಪೊರೇಶನ್‍ಗಾಗಿ ಭಾರತದ ಸ್ವಾತಂತ್ರೋತ್ಸವದ ೫೦ ವರ್ಷದ ನೆನಪಿನ ಕಾರ್ಯಕ್ರಮಕ್ಕಾಗಿ ಬರೆದುಕೊಟ್ಟ ನಾಟಕ-ಟಿಪ್ಪುವಿನ ಕನಸುಗಳು. ಆತ್ಮ ಚರಿತ್ರೆ ಆಡಾಡತ ಆಯುಷ್ಯ (೨೦೧೧) ಚಿತ್ರರಂಗ 'ಸಂಸ್ಕಾರ'(೧೯೭೦) ಚಲನಚಿತ್ರವು ಕನ್ನಡದ ಪ್ರಥಮ ಕಲಾತ್ಮಕ ಚಲನಚಿತ್ರ. ಯು.ಆರ್.ಅನಂತಮೂರ್ತಿಯವರ ಕಾದಂಬರಿಯನ್ನು ಆಧರಿಸಿದ ಈ ಚಲನಚಿತ್ರದಲ್ಲಿ ಗಿರೀಶ ಕಾರ್ನಾಡರದು ಪ್ರಮುಖ ಪಾತ್ರ-ಪ್ರಾಣೇಶಾಚಾರ್ಯರದು. ಪಿ.ಲಂಕೇಶ ಅವರದು ವಿರುದ್ಧ ವ್ಯಕ್ತಿತ್ವದ ಪಾತ್ರ-ನಾರಣಪ್ಪನದು. ಈ ಚಿತ್ರದ ನಿರ್ದೇಶಕರು ಪಟ್ಟಾಭಿರಾಮರೆಡ್ಡಿ ಅವರು ಮತ್ತು ಚಿತ್ರಕಥೆ ಗಿರೀಶ ಕಾರ್ನಾಡರದ್ದು. ಇದು ಕನ್ನಡಕ್ಕೆ ಪ್ರಥಮ ಸ್ವರ್ಣಕಮಲವನ್ನು ತಂದು ಕೊಟ್ಟ ಚಿತ್ರ. ಆ ನಂತರ ಎಸ್.ಎಲ್. ಭೈರಪ್ಪನವರ ವಂಶವೃಕ್ಷ ಕಾದಂಬರಿಯನ್ನು ಆಧರಿಸಿ, ಬಿ. ವಿ. ಕಾರಂತರ ಜೊತೆಗೂಡಿ ವಂಶವೃಕ್ಷ(೧೯೭೨) ಚಿತ್ರವನ್ನು ನಿರ್ದೇಶನ ಮಾಡಿದರು. ಇದು ಹಲವಾರು ರಾಷ್ಟ್ರೀಯ, ಅಂತರರಾಷ್ಟ್ರೀಯ ಪುರಸ್ಕಾರ ಪಡೆಯಿತು. ನಿರ್ಮಾಣ: ಜಿ.ವಿ.ಅಯ್ಯರ್. ಮುಂದೆ 'ತಬ್ಬಲಿಯು ನೀನಾದೆ ಮಗನೆ'(೧೯೭೭), 'ಕಾಡು'(೧೯೭೪), 'ಒಂದಾನೊಂದು ಕಾಲದಲ್ಲಿ'(೧೯೭೮) ಚಿತ್ರಗಳನ್ನು ನಿರ್ದೇಶಿಸಿದರು. 'ಕಾಡು' ಹಲವಾರು ಪ್ರಶಸ್ತಿ ಪುರಸ್ಕಾರ ಪಡೆಯಿತು. ನಂತರ ಉತ್ಸವ್, ಗೋಧೂಳಿ ಎಂಬ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದರು. ಬಳಿಕ ರಾಷ್ಟ್ರಕವಿ ಕುವೆಂಪು ಅವರ ಕಾನೂರು ಸುಬ್ಬಮ್ಮ ಹೆಗ್ಗಡಿತಿ ಕಾದಂಬರಿಯನ್ನು ಆಧರಿಸಿ "ಕಾನೂರು ಹೆಗ್ಗಡಿತಿ"(೧೯೯೯) ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವು ರಾಜ್ಯ ಪ್ರಶಸ್ತಿ, ರಾಷ್ಟ್ರೀಯ ಪುರಸ್ಕಾರ ಪಡೆದು, ಪನೋರಮಕ್ಕೂ ಆಯ್ಕೆಯಾಯಿತು. ಇದಲ್ಲದೆ ಕನಕ ಪುರಂದರ, ದ.ರಾ.ಬೇಂದ್ರೆ ಹಾಗು ಸೂಫಿ ಪಂಥ ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದರು. ಪರಿಸರ ವಿನಾಶ ಕುರಿತು ಚೆಲುವಿ ಎಂಬ ಕಿರುಚಿತ್ರವನ್ನು ನಿರ್ದೇಶಿಸಿದರು. ೨೦೦೭ರಲ್ಲಿ ತೆರೆಕಂಡ ಆ ದಿನಗಳು ಚಿತ್ರಕ್ಕೆ ಅಗ್ನಿ ಶ್ರೀಧರ ಅವರ ಜೊತೆಗೂಡಿ ಚಿತ್ರಕಥೆಯನ್ನು ಬರೆದಿದ್ದಾರೆ. ಇತರೆ ಕಾರ್ನಾಡ್ ಅವರಿಗೆ ಪ್ರಶಸ್ತಿ ಬಂದಾಗ ಸೌಜನ್ಯದಿಂದಲೇ ಮರಾಠಿಯ ವಿಜಯತೆಂಡೂಲ್ಕರ್ ಅವರಂಥವರಿಗೆ ಈ ಪ್ರಶಸ್ತಿ ಬರಬೇಕಿತ್ತು ಎಂದು ಹೇಳಿ ದೊಡ್ಡತನ ಮೆರೆದಿದ್ದರು. ಇಬ್ಬರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕಾದಂಬರಿಗಳನ್ನು ಕುವೆಂಪುರ ಕಾನೂರು ಸುಬ್ಬಮ್ಮ ಹೆಗ್ಗಡತಿ ಮತ್ತು ಯು ಆರ್ ಅನಂತಮೂರ್ತಿಯವರ ಸಂಸ್ಕಾರ ಸಿನಿಮಾ ಮಾಡಿದ ಏಕೈಕ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರೆಂಬ ಗೌರವಕ್ಕೆ ಕಾರ್ನಾಡ್ ಪಾತ್ರರಾಗಿದ್ದಾರೆ. ತಮ್ಮ ೪೨ರ ವಯಸ್ಸಿನಲ್ಲಿ ಕೊಡಗಿನ ವೀರಯೋಧ ಕೋದಂಡೇರ ಗಣಪತಿಯವರ ಪುತ್ರಿ, ಡಾ. ಸರಸ್ವತಿ ಗಣಪತಿಯವರನ್ನು ಅಧಿಕೃತವಾಗಿ ಮದುವೆಯಾದ ಗಿರೀಶರಿಗೆ ೨ ಮಕ್ಕಳು, ಶಾಲ್ಮಲಿ ರಾಧಾ ಮತ್ತು ರಘು ಅಮಯ್. ೧೦ ವರ್ಷಗಳ ಕಾಲ, ಲಿವ್-ಇನ್ ಆಗಿ ಸಂಸಾರ ನಡೆಸಿದ ಹಿರಿಮೆ ಕಾರ್ನಾಡರದು. ತುಘಲಕ್ ನಾಟಕವನ್ನು ತಮ್ಮ ಮಿತ್ರ ಮತ್ತು ಸಹಾಯಕ ನಿರ್ದೇಶಕ ಕೃಷ್ಣ ಬಸರೂರುರೊಡಗೂಡಿ ಬರೆದಿದ್ದಾಗಿ, ಆ ನಾಟಕದ ಅರ್ಪಣೆಯಲ್ಲಿ ಹೇಳಿದ್ದಾರೆ. ಒಂದಾನೊಂದು ಕಾಲದಲ್ಲಿ ಚಿತ್ರವನ್ನು ೧೯೭೭ರಲ್ಲಿ ನಿರ್ದೇಶಿಸುವಾಗ ಕಳರಿಪಯಟ್ಟು ಮತ್ತು ಮುಂತಾದ ಸಾಹಸಕಲೆಗಳನ್ನು ಮೊದಲ ಬಾರಿ ಕನ್ನಡ ತೆರೆಯಲ್ಲಿ ಅಳವಡಿಸಿದ ಹಿರಿಮೆ ಕಾರ್ನಾಡರದ್ದು. "ಕಾರ್ನಾಡರು ವಸ್ತುವನ್ನು ಗ್ರಹಿಸುವ ಕ್ರಮದಲ್ಲೇ ಅವರ ಅನನ್ಯತೆ ಇದೆ. ಈ ಗ್ರಹಿಕೆಗೆ ಪೂರಕವಾದ ರಚನಾಕ್ರಮವನ್ನು ಅವರು ಕಂಡುಕೊಂಡಿದ್ದಾರೆ. ಒಂದು ಸಮಸ್ಯೆಯನ್ನು ನಾಟಕ ರೂಪಕ್ಕೆ ಒಗ್ಗಿಸಿಕೊಂಡು ಅದಕ್ಕೊಂದು structure ಕೊಟ್ಟು ಜನರ ಮುಂದಿಡುವುದರಲ್ಲೇ ನಾಟಕಕಾರನ ಸೋಲು ಗೆಲುವು ಎರಡೂ ಅಡಗಿದೆ." ಎಂದು ಕಾರ್ನಾಡರ ನಾಟಕಗಳ ವಸ್ತು, ಗ್ರಹಿಕೆ ಬಗ್ಗೆ ಭಾರತೀಯ ರಂಗಭೂಮಿಯ ಹಿರಿಯ ನಿರ್ದೇಶಕ ಬಿ. ವಿ. ಕಾರಂತರು ದಾಖಲಿಸುತ್ತಾರೆ. ಕಾರ್ನಾಡರು ಅಭಿನಯಿಸಿದ ಪ್ರಮುಖ ಚಲನಚಿತ್ರಗಳು ಅಭಿನಯಿಸಿದ ತೆಲುಗು ಚಿತ್ರಗಳು ಚೈತನ್ಯ -೧೯೯೧ ಪುಲಿ - ೨೦೧೦ ಪ್ರೇಮಿಕುಡು(:te:ప్రేమికుడు) ಆನಂದಭೈರವಿ(:te:ఆనంద భైరవి) ರಕ್ಷಕುಡು(:te:రక్షకుడు) ಧರ್ಮ ಚಕ್ರಂ(:te:ధర్మచక్రం) -೧೯೯೬ ಶಂಕರ್ ದಾದಾ ಎಂ.ಬಿ.ಬಿ.ಎಸ್(:en:శంకర్ దాదా ఎం.బి.బి.ఎస్.) -೨೦೦೪ ಗುಣ - ೧೯೯೧ ಕೊಂಡೂರ - ೧೯೭೮ ಪ್ರಶಸ್ತಿ, ಸನ್ಮಾನಗಳು ಸಿನಿಮಾ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ -೧೯೭೪ ಪದ್ಮಭೂಷಣ -೧೯೯೨ ಜ್ಞಾನಪೀಠ -೧೯೯೮ ಕಾಳಿದಾಸ ಸಮ್ಮಾನ್ - ೧೯೯೮ ಕಾರ್ನಾಡ್ ಕೇಂದ್ರ ಸಂಗೀತ-ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ೧೯೮೮-೯೩ ಕಾರ್ಯನಿರ್ವಹಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ನೆಹರು ಸೆಂಟರ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಪುಟ್ಟಣ್ಣ ಕಣಗಾಲ್ ಪ್ರಶಸ್ತಿ: ೨೦೦೮ -೦೯ ರ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಮಂಡಳಿ ಘೋಷಿಸಿದ್ದ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಪ್ರಶಸ್ತಿಯನ್ನು ಗಿರೀಶ್ ಕಾರ್ನಾಡ್ ನಿರಾಕರಿಸಿದ್ದಾರೆ . ಜೀವಮಾನದ ಸಾಧನೆಗಾಗಿ ಕೆ.ಎಸ್.ಆರ್.ದಾಸ್ ಅವರಿಗೆ ನೀಡಲಾಗಿದ್ದ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಕೆಲ ಕ್ಷಣಗಳಲ್ಲಿಯೇ ಹಿಂದಕ್ಕೆ ಪಡೆದು ಅದನ್ನು ಗಿರೀಶ್ ಕಾರ್ನಾಡ್ ಅವರಿಗೆ ನೀಡಲಾಗಿತ್ತು.(ದಾಸ್ ಅವರಿಗೆ ಪ್ರಶಸ್ತಿ ನೀಡಿದ್ದನ್ನು ಘೋಷಿಸಿದ ಕೂಡಲೆ "ಕೆ.ಎಸ್.ಆರ್.ದಾಸ್" ಅವರು ಕನ್ನಡ ಚಿತ್ರರಂಗಕ್ಕೆ ಹೆಚ್ಚಿನ ಸೇವೆ ಸಲ್ಲಿಸಿಲ್ಲವೆಂಬುದು ಪತ್ರಕರ್ತರಿಂದ ಪ್ರತಿಭಟನೆ ವ್ಯಕ್ತವಾಗಿದ್ದರಿಂದ ಅದನ್ನು ಕೂಡಲೆ ಹಿಂದೆ ಪಡೆದು ಅದನ್ನು ಕಾರ್ನಾಡ್ ಅವರಿಗೆ ಭಾರ್ಗವ ನೀಡಿದ್ದರು). ಟಾಟಾ ಲಿಟರೇಚರ್ ಲೈವ ಜೀವಮಾನ ಸಾಧನೆ (ಚಿತ್ರೋದ್ಯಮ)-2017 ಡಾ.ಟಿ.ಎಂ.ಎ.ಪೈ ವಿಶಿಷ್ಟ ಕೊಂಕಣಿ ಸಾಧಕ ಪ್ರಶಸ್ತಿ (1996) ನಿಧನ ಗಿರೀಶ್ ಕಾರ್ನಾಡ್ ಅವರು ದಿನಾಂಕ ೧೦-೬-೨೦೧೯ರಂದು ಬೆಂಗಳೂರಿನಲ್ಲಿ ಮರಣ ಹೊಂದಿದರು. ಹೊರ ಸಂಪರ್ಕಕೊಂಡಿಗಳು ಹೊಸ ಪರಂಪರೆಗೆ ಮೇಲ್ಪಂಕ್ತಿ ಹಾಕಿದ ನಾಯಕ ಕಾರ್ನಾಡ- ಲೇ:ಪ್ರೊ.ಜಿ.ಕೆ. ಗೋವಿಂದರಾವ್ ಉಲ್ಲೇಖಗಳು ನಾಟಕಕಾರರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಚಲನಚಿತ್ರ ನಟರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತರು ಕಲಾವಿದರು ಲೇಖಕರು ೨೦೧೯ ನಿಧನ ೧೯೩೮ ಜನನ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು
1120
https://kn.wikipedia.org/wiki/%E0%B2%97%E0%B3%8B%E0%B2%AA%E0%B2%BE%E0%B2%B2%E0%B2%95%E0%B3%83%E0%B2%B7%E0%B3%8D%E0%B2%A3%20%E0%B2%85%E0%B2%A1%E0%B2%BF%E0%B2%97
ಗೋಪಾಲಕೃಷ್ಣ ಅಡಿಗ
ಎಂ. ಗೋಪಾಲಕೃಷ್ಣ ಅಡಿಗ : - (೧೮ ಫೆಬ್ರುವರಿ ೧೯೧೮ - ೧೪ ನವೆಂಬರ ೧೯೯೨) ಗೋಪಾಲಕೃಷ್ಣ ಅಡಿಗರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಗೇರಿ ಎಂಬ ಹಳ್ಳಿಯಲ್ಲಿ. ಪುರೋಹಿತ ಮನೆತನಕ್ಕೆ ಸೇರಿದ ಅಡಿಗರ ತಂದೆ ಸಂಸ್ಕೃತದಲ್ಲಿ ಶ್ಲೋಕಗಳನ್ನೂ, ಕನ್ನಡದಲ್ಲಿ ದೇಶಭಕ್ತಿಯ ಗೀತೆಗಳನ್ನೂ ರಚಿಸುತ್ತಿದ್ದರಂತೆ. ದಕ್ಷಿಣ ಕನ್ನಡ ಜಿಲ್ಲೆ ಯಕ್ಷಗಾನದ ತವರೂರು. ಚಿಕ್ಕಂದಿನಲ್ಲಿ ಅಡಿಗರು ಯಕ್ಷಗಾನ ಪ್ರಸಂಗಗಳು ಸುತ್ತಮುತ್ತ ಎಲ್ಲಿ ನಡೆದರೂ ತಪ್ಪಿಸಿಕೊಳ್ಳದೆ ನೋಡುತ್ತಿದ್ದರಂತೆ. ಆ ಹಾಡುಗಳ, ಮಟ್ಟುಗಳ ಕುಣಿತದ ಭಂಗಿಗಳು ಅವರ ಮನಸ್ಸಿನಲ್ಲಿ ಸದಾ ಅನುರಣನಗೊಳ್ಳುತ್ತಿತ್ತಂತೆ. "ಈ ವಾತಾವರಣದಲ್ಲಿ ನಾನು ನನ್ನ ಹದಿಮೂರನೇ ವಯಸ್ಸಿನಲ್ಲೇ ಪದ್ಯ ರಚನೆಗೆ ಕೈ ಹಾಕಿದೆನೆಂದು ತೋರುತ್ತದೆ. ಭಾಮಿನಿ ಷಟ್ಪದಿ, ವಾರ್ಧಕ ಷಟ್ಪದಿ, ಕಂದ ಪದ್ಯಗಳನ್ನು ರಚಿಸುತ್ತಿದ್ದೆ" ಎಂದು ಅವರೇ ಹೇಳಿದ್ದಾರೆ. ವಿದ್ಯಾಭ್ಯಾಸ/ಶಿಕ್ಷಣ ಬೈಂದೂರುಗಳಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ನಂತರ ಅಡಿಗರು ಕುಂದಾಪುರದ ಹೈಸ್ಕೂಲಿನಲ್ಲಿ ಶಿಕ್ಷಣ ಮುಗಿಸಿದರು. ಹದಿಮೂರರ ಹರೆಯದಲ್ಲೇ ಪದ್ಯ ಬರೆಯಲಾರಂಭಿಸಿದ ಅವರಿಗೆ ಕುಂದಾಪುರದ ವಾತಾವರಣ ಇನ್ನಷ್ಟು ಬರೆಯಲು ಪ್ರೇರಣೆ ನೀಡಿತು.ಮೊದಲೇ ಇದ್ದ ಓದುವ ಹುಚ್ಚು ಇನ್ನಷ್ಟು ಬಲವಾಯಿತು. ಆ ಸಂದರ್ಭದಲ್ಲಿ ಶಿವರಾಮ ಕಾರಂತರ ಅಣ್ಣ ಕೋಟ ಲಕ್ಮೀನಾರಾಯಣ ಕಾರಂತರು ಅಡಿಗರಿಗೆ ಒಳ್ಳೆಯ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸುತ್ತಿದ್ದರು. ಆಗ ಇಡೀ ದೇಶವೇ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟ, ಪರಾಕಾಷ್ಠೆಯನ್ನು ಸಮೀಪಿಸುತ್ತಿದ್ದ ಕಾಲ. ಅಡಿಗರೂ ಹುಮ್ಮಸ್ಸಿನಿಂದ ಹೋರಾಟದಲ್ಲಿ ಭಾಗಿಯಾದರು. ಹೆಂಡದಂಗಡಿಯ ಮುಂದೆ `ಪಿಕೆಟಿಂಗ್' ಮಾಡಿದರು. ದೇಶ ಭಕ್ತಿಯ ಉತ್ಸಾಹ, ಉದ್ರೇಕಗಳು ಅವರ ಕಾವ್ಯ ರಚನೆಗೆ ಪೂರಕವಾದವು. ಅವರ ಕೆಲವು ಕವನಗಳು ಬೆಂಗಳೂರಿನ `ಸುಬೋಧ', ಮಂಗಳೂರಿನ `ಬಡವರ ಬಂಧು', ಮುಂತಾದ ಪತ್ರಿಕೆಗಳಲ್ಲಿ ಪ್ರಕಟವಾದವು. ಎಸ್.ಎಸ್.ಎಲ್.ಸಿ ಮುಗಿದ ನಂತರ ಅಡಿಗರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಇಂಟರ್ಮೀಡಿಯಟ್ ತರಗತಿಗೆ ಸೇರಿ ಕೊಂಡರು. ಅಲ್ಲಿ ಕಳೆದ ಐದಾರು ವರ್ಷ ಅವರ ಬದುಕಿನ ಒಂದು ಮಹತ್ವದ ಅವಧಿಯಾಗಿತ್ತು. ಈ ಅವಧಿಯಲ್ಲಿ ಅವರಿಗೆ ಬಿ.ಎಚ್. ಶ್ರೀಧರ್, ಹೆಚ್ ವೈ.ಶಾರದಾಪ್ರಸಾದ್, ಚದುರಂಗ, ಟಿ.ಎಸ್.ಸಂಜೀವ ರಾವ್. ಎಂ.ಶಂಕರ್, ಕೆ.ನರಸಿಂಹಮೂರ್ತಿ ಮುಂತಾದವರ ಒಡನಾಟ, ಸ್ನೇಹ ಅವರಿಗೆ ಲಭ್ಯವಾಯಿತು. `ಭಾವತರಂಗ' ಸಂಕಲನದ ಹೆಚ್ಚಿನ ಕವನಗಳು ಈ ಅವಧಿಯಲ್ಲಿ ರಚಿತವಾದವು. ಅವುಗಳಲ್ಲೊಂದಾದ `ಒಳತೋಟಿ' ಎಂಬ ಕವನ ಬಿ.ಎಂ.ಶ್ರೀ ರಜತ ಮಹೋತ್ಸವದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನದ ಸುವರ್ಣ ಪದಕವನ್ನು ಪಡೆಯಿತು. ಅಡಿಗರು ತಮ್ಮ ಪ್ರಾರಂಭದ ವಿದ್ಯಾಭ್ಯಾಸವನ್ನು ದಕ್ಷಿಣ ಕನ್ನಡದಲ್ಲಿ ಮುಗಿಸಿ, ನಂತರ ಮೈಸೂರಿಗೆ ಬಂದರು. ಬಿ.ಎ.(ಆನರ್ಸ್), ಎಂ.ಎ.(ಇಂಗ್ಲೀಷ್) ಪದವಿಗಳನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದ ಅವರು ಮೈಸೂರು ಶಾರದಾವಿಲಾಸ ಕಾಲೇಜು, ಸೆಂಟ್ ಫಿಲೋಮಿನಾ ಕಾಲೇಜು ಹಾಗೂ ಕುಮಟಾದ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು. ನಂತರ ಉಡುಪಿಯ ಪೂರ್ಣಪ್ರಜ್ಞ ಕಾಲೇಜು, ಸಾಗರದ ಲಾಲ್ ಬಹಾದ್ದೂರ್ ಶಾಸ್ತ್ರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡಿದ ಅಡಿಗರು ನ್ಯಾಷನಲ್ ಬುಕ್ ಟ್ರಸ್ಟ್‌ನ ನಿರ್ದೇಶಕರಾಗಿ, ಸಿಮ್ಲಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸ್ಟಡೀಸ್‌ನ ರಿಸರ್ಚ್ ಫೆಲೋ ಆಗಿ ಕೆಲಸ ಮಾಡಿದರು. ಐವತ್ತೊಂದನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೌರವಿಸಲ್ಪಟ್ಟ ಅಡಿಗರು ರಾಜ್ಯ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಕೇರಳದ ಕುಮಾರನ್ ಆಶಾನ್ ಪ್ರಶಸ್ತಿ ಹಾಗೂ ಕಬೀರ್ ಸಂಮಾನ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. "ಸಾಕ್ಷಿ" ಪತ್ರಿಕೆಯ ಸಂಪಾದಕರಾಗಿ ಹೊಸ ಸಂವೇದನೆ ಹಾಗೂ ಹೊಸ ಅಭಿವ್ಯಕ್ತಿ ವಿಧಾನಗಳಿಗೆ ಮಾರ್ಗದರ್ಶಕರಾದರು. ಒಮ್ಮೆ ಬೆಂಗಳೂರು ಕ್ಷೇತ್ರದಿಂದ ಲೋಕಸಭಾ ಚುನಾವಣೆಗೂ ಸ್ಫರ್ಧಿಸಿದ್ದರು. ಅಡಿಗರು ಸಾಗರದಲ್ಲಿದ್ದಾಗ ಕೇವಲ ಸಾಹಿತಿಗಳನ್ನು ಕಾಲೇಜಿಗೆ ಆಹ್ವಾನಿಸಿ ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಡುತ್ತಿದ್ದರು. ಅವರು ತಮ್ಮ ವಿದ್ಯಾರ್ಥಿಗಳಿಗೂ ವಿವಿಧ ಪುಸ್ತಕಗಳನ್ನು ಓದಲು ಪ್ರೇರೇಪಿಸುತ್ತಿದ್ದರು. ಅವರು ಕಾಲೇಜಿನ ಉಪನ್ಯಾಸಕರನ್ನು ತಮ್ಮ ಗೆಳೆಯರಂತೆಯೇ ಸ್ವೀಕರಿಸಿದ್ದರು. ಅವರು ಒಬ್ಬರೇ ಕಾಲೇಜಿನ 'ಕ್ಯಾಂಟೀನ್' ಹೋಗಿದ್ದು ತೀರಾ ಅಪರೂಪವೇ ಸರಿ. ಕೆಲವು ಬಾರಿ ಅವರು ತಮ್ಮ ವಿದ್ಯಾರ್ಥಿಗಳಿಗೂ ಶುಲ್ಕ ತುಂಬಲು, ಪುಸ್ತಕ ಕೊಳ್ಳಲು ತಮ್ಮ ಸಂಬಳದಿಂದಲೇ ಸಹಾಯ ಮಾಡುತ್ತಿದ್ದರು. ಮನೆಯಲ್ಲಿಯೂ ಒಬ್ಬಿಬ್ಬ ವಿದ್ಯಾರ್ಥಿಗಳು ಇದ್ದೇ ಇರುತ್ತಿದ್ದರು. ಸಾಹಿತ್ಯ ಕನ್ನಡ ಸಾಹಿತ್ಯದ ನವ್ಯ ಕಾವ್ಯದ ಪ್ರವರ್ತಕರು. ಮೊಗೇರಿ ಗೋಪಾಲಕೃಷ್ಣ ಅಡಿಗರು ಕನ್ನಡದ ಸರ್ವಕಾಲಿಕ ಶ್ರೇಷ್ಠ ಕವಿಗಳಲ್ಲೊಬ್ಬರು. ಕನ್ನಡದ ಕಾವ್ಯ ಕ್ಷೇತ್ರದಲ್ಲಿ ನವ್ಯತೆ ಎಂಬ ಹೊಸ ಸಂಪ್ರದಾಯವನ್ನು ಬೆಳೆಸಿ, ಅದನ್ನು ಪರಾಕಾಷ್ಠೆಗೊಯ್ದು ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮ ನೀಡಲು ಕಾರಣರಾದ ನವ್ಯ ಕಾವ್ಯದ ಪ್ರವರ್ತಕ ಕವಿ. ಕಾವ್ಯದಲ್ಲಿ ಅವರು ಮಾಡಿದ ಕ್ರಾಂತಿಕಾರಿ ಪರಿವರ್ತನೆ ಕಥೆ, ಕಾದಂಬರಿ, ನಾಟಕ, ವಿಮರ್ಶೆ ಮುಂತಾದ ಇತರ ಸಾಹಿತ್ಯ ಪ್ರಕಾರಗಳ ಮೇಲೂ ಪ್ರಭಾವ ಬೀರಿ, ಸಮಗ್ರ ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮ ನೀಡಿತು. ಅಡಿಗರು ಕನ್ನಡ ವಿಮರ್ಶೆಯಲ್ಲೂ ಪ್ರಬುದ್ಧತೆಯನ್ನು ತಂದರು. `ಸಾಕ್ಷಿ' ಎಂಬ ಉನ್ನತಮಟ್ಟದ ಸಾಹಿತ್ಯಪತ್ರಿಕೆಯನ್ನು ಸುಮಾರು ಇಪ್ಪತ್ತು ವರ್ಷ ಕಾಲ ನಡೆಸಿ, ಹೊಸ ಸಂವೇದನೆಯನ್ನು ಹೊಸ ಲೇಖಕರನ್ನು ಪ್ರೋತ್ಸಾಹಿಸಿದರು. ತಮ್ಮ ಕಾವ್ಯ, ಗದ್ಯ, ವೈಚಾರಿಕತೆ, ವ್ಯಕ್ತಿತ್ವ, ಪ್ರಭಾವ, ಮಾರ್ಗದರ್ಶನಗಳ ಮೂಲಕ ಅಡಿಗರು ಮಾಡಿದ ಸಾರಸ್ವತ ಸಾಧನೆ ಅನನ್ಯವಾದುದು.ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ರಾಜಕೀಯ- ಹೀಗೆ ವಿವಿಧ ವಿಷಯಗಳ ಬಗ್ಗೆ ಅಡಿಗರು ಅನೇಕ ಲೇಖನಗಳನ್ನು ಬರೆದಿದ್ದಾರೆ. ಅವರ ಎಲ್ಲಾ ವೈಚಾರಿಕ ಲೇಖನಗಳೂ ‘ಸಮಗ್ರಗದ್ಯ’(ಸಾಕ್ಷಿಪ್ರಕಾಶನ, 1977) ಸಂಪುಟವೊಂದರಲ್ಲಿ ಪ್ರಕಟವಾಗಿದೆ. ಅಡಿಗರ ಮೊದಲ ಕವನ ಸಂಕಲನ ‘ಭಾವತರಂಗ’ದ ಮುನ್ನುಡಿಯಲ್ಲಿ ಬೇಂದ್ರೆಯವರು ಹೇಳಿದ್ದಾರೆ: “ನಾನು ಕವಿತೆಗಳನ್ನು ಬರೆಯಲು ಆರಂಭಿಸಿದಾಗ ಇದ್ದ ಶೈಲಿಯ ಪ್ರಾಯೋಗಿಕತೆ ಇಂದಿನ ಕನ್ನಡದಲ್ಲಿ ಅಷ್ಟುಮಟ್ಟಿಗೆ ಇಲ್ಲ. ಗೆಳೆಯ ಗೋಪಾಲಕೃಷ್ಣರಿಗೆ ಅವರ ವಯಸ್ಸಿಗಿದ್ದ ಶೈಲಿಯ ಪಾಕ ನನಗೆ ಆ ವಯಸ್ಸಿಗೆ ಇರಲಿಲ್ಲ. ಆದರೆ ನಮಗೆ ಆ ಕಾಲದಲ್ಲಿದ್ದ ನಾವಿನ್ಯದ ಅನುಕೂಲ ಈಗಿನವರಿಗಿಲ್ಲ”. ಬೇಂದ್ರೆಯವರು ಹೇಳುವಂತೆ ಆ ಕಾಲಕ್ಕಾಗಲೇ ಕನ್ನಡ ಕಾವ್ಯ ಸಂದರ್ಭ ಸಿದ್ಧಶೈಲಿಯೊಂದು ರೂಪುಗೊಂಡಿತ್ತು. ನವೋದಯ ಕಾವ್ಯ ಸಂಪ್ರದಾಯದ ಅತ್ಯುತ್ತಮ ಕಾವ್ಯ ಸೃಷ್ಟಿಯಾಗಿತ್ತು. 1926ರ ವೇಳೆಗೆ ಬೀ.ಎಂ.ಶ್ರೀ ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ಮುನ್ನಡೆದ ಕನ್ನಡ ಕಾವ್ಯ ಒಂದು ಸ್ಪಷ್ಟ ರೂಪ ಪಡೆದು ಮಹತ್ವದ ಸಂಕಲನಗಳು ಆ ವೇಳೆಗಾಗಲೇ ಪ್ರಕಟವಾಗಿದ್ದವು. ಹೊಸದಾಗಿ ಬರೆಯಲು ಆರಂಭಿಸುವ ತರುಣರಿಗೆ ಒಂದು ಕಾವ್ಯ ಮಾದರಿ ಕಣ್ಣೆದುರಿಗಿತ್ತು. ಈ ದಾರಿಯನ್ನು ಬಿಟ್ಟ ಹೊಸದಾರುಯನ್ನು ಕಂಡುಕೊಳ್ಳುವುದು, ತನ್ನತನವನ್ನು ರೂಪಿಸಿಕೊಳ್ಳುವುದು ಅಡಿಗರು ಕಾವ್ಯ ರಚನೆಯಲ್ಲಿ ಎದುರಿಸಿದ ಬಹುಮುಖ್ಯ ಸಮಸ್ಯೆ ಎಂದು ತೋರುತ್ತದೆ. ಅಡಿಗರ ಕವನದ ಸಾಲುಗಳು ಅನ್ಯರೊರೆದುದನೆ ಬರೆದುದನೆ ನಾ ಬರೆಬರೆದು ಬಿನ್ನಗಾಗಿದೆ ಮನವು, ಬಗೆಯೊಳಗನೇ ತೆರೆದು ನನ್ನ ನುಡಿಯೊಳೆ ಬಣ್ಣ ಬಣ್ಣದಲಿ ಬಣ್ಣಿಸುವ ಪನ್ನತಿಕೆ ಬರುವನಕ ನನ್ನ ಬಾಳಿದು ನರಕ ‘ಭಾವತರಂಗದ’ ಮೊದಲ ಕವಿತೆಯಲ್ಲಿಯೇ ತನ್ನತನವನ್ನು ಕಂಡುಕೊಳ್ಳುವ ಮನೋಭಾವವನ್ನು ಅಡಿಗರು ಸ್ಪಷ್ಟವಾಗಿ ಸೂಚಿಸಿದ್ದಾರೆ. ವಿಧಿಯೇ ನಿನ್ನಿದಿರು ಮಾರಾಂತು ಹೋರಾಡಿ ಕೆಚ್ಚೆದೆತನದ ಬಲ್ಮೆಯನ್ನು ಬಿತ್ತರಿಪೆನು ಪದವನಿಡುತೆನ್ನೆದೆಯ ಮೇಲೆ ತಾಮಡವವೆಸಗು ಬೆದರುವೆನೆ ಬೆಚ್ಚುವೆನೆ ನಿನಗೆ ನಾನು(ವಿಧಿಗೆ) ಈ ಕೆಚ್ಚು, ಹೋರಾಟದ ಆಹ್ವಾನ ಅಡಿಗರ ಮನೋಭಾವಕ್ಕೆ ಸಹಜವಾದುದೆನ್ನಿಸಿದರೂ ಅದು ಪ್ರಕಟಗೊಂಡಿರುವ ಬಗೆ ಸಂಪೂರ್ಣವಾಗಿ ಭಾವವೇಶದಿಂದ ಬಂದದ್ದು. ಮುಂದೆ ಅಡಿಗರು ಗೆಲ್ಲಲು ಬಯಸಿದ್ದು ವಿರೋಧಿಸಿದ್ದು ಇಂಥ ರೀತಿಯನ್ನೇ. ದ್ವಿತೀಯ ಪ್ರಾಸ, ಮಾರಾಂತು, ಬಿತ್ತರಿ ಪೆನು, ಎಸಗು ಮೊದಲಾದ ಪದಪ್ರಯೋಗಗಳ ನಡೆದಿದೆ. ಹೊಸಹಾದಿಯನು ಹಿಡಿದು ನಡೆಯಣ್ಣ ಮುಂದೆ ಹೊಸ ಜೀವ ಹೊಸ ಭಾವ ಹೊಸ ವೇಗದಿಂದೆ ಅಂಜದಿರು ಗೆಳೆಯ ಹೊಸಹಾದಿಯನು ಹಿಡಿಯೆ ಮಂಜುತರ ಸೃಷ್ಟಿಗಾನದಲಿ ಮೈಮರೆಯೆ ಎಂಜಲಾಗದ ಮಧುರ ಮಧುರಸವ ಸವಿಯೆ ರಂಜಿಸುವ ಕಾಡುಮೇಡುಗಳನಂಡಲೆಯೆ(ಹೊಸ ಹಾದಿ) ಇಂಥ ಬಾಲ್ಯ ಕಳೆದ ಬಳಿಕ ಬಂದಾ ಹರೆಯ ದುಲ್ಕೆಯಿದು ಥಟ್ಟನೆ ಪಳಂಚಲೆದೆಗೆ ಅಲೆಅಲೆಗಳೆದ್ದು ಬಗೆ ಕದಡಿ ಹೋದುದು ಶಾಂತ ಸರದೊಳಾವುದೋ ಕಲ್ಲು ಬಿದ್ದ ಹಾಗೆ ಹಲವು ತಾನಗಳ ಸಂತಾನವಾದುದು ಮಧುರ ನೊಳಬಾಳು; ಹರಯದೊಡ್ಡೋಲಗದಲಿ ತನಗೆಲ್ಲಿ ನೆಲೆ? ಬಾಲಹಾಡಿಗೆಲ್ಲಿಹುದು ಬೆಲೆ? ಎಂದು ಮುರುಟಿದನು ತನುಮನಗಳಲ್ಲಿ(ಒಳತೋಟಿ) ಕಂಡು ಮಾತಾಡಿ ಮೈ ದಡವಿ ನಗಿಸಿ ನಲಿವರಿಲ್ಲ ಬೆಂದ ಬಗೆಗೆ ಸೊದೆಯನೆರೆದು ಕಂಬನಿಯ ತೊಡೆವರಿಲ್ಲ ಮಾನವ ಸಹಜ ಸಂಬಂಧಗಳಿಂದ ದೊರಕಬಹುದಾಗಿದ್ದ ಪ್ರೀತಿಯಿಂದ ವಂಚಿತರಾದ ಕವಿ ಹೇಳುತ್ತಾರೆ. ಕಲ್ಲಾಗು ಕಲ್ಲಾಗು ಬಾಳ ಬಿರುಗಾಳಿಯಲಿ ಅಲ್ಲಾಡದೆಯೆ ನಿಲ್ಲು ಜೀವ( ಕಲ್ಲಾಗು ಕಲ್ಲಾಗು ) ಉದ್ಯೋಗ ಪರ್ವ ಬಿ.ಎ ಆನರ್ಸ್ ಮುಗಿಸಿದ ಬಳಿಕ ಅಡಿಗರು ತುಮಕೂರು, ಬೆಂಗಳೂರು, ದಾವಣಗೆರೆ, ಚಿತ್ರದುರ್ಗ ಮುಂತಾದ ಊರುಗಳಲ್ಲಿ ಅಧ್ಯಾಪಕರಾಗಿ ದುಡಿದರು. ಸ್ವಲ್ಪ ಕಾಲ ಅಠಾರ ಕಚೇರಿಯಲ್ಲಿಯೂ ಗುಮಾಸ್ತರಾಗಿ ದುಡಿದರು. ಅನಂತರ ಶಾರದಾ ವಿಲಾಸ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾದರು. (೧೯೪೮-೫೨) ಬಳಿಕ ಎರಡು ವರ್ಷ ಕುಮಟಾದ ಕೆನರಾ ಕಾಲೇಜಿನಲ್ಲೂ, ಅನಂತರ ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿಯೂ, ಇಂಗ್ಲಿಷ್ ಉಪನ್ಯಾಸಕರಾಗಿ (೧೯೫೪-೫೨) ಹತ್ತು ವರ್ಷ ದುಡಿದರು.೧೯೬೪ರಿಂದ ೬೮ರವರೆಗೆ ಸಾಗರದ ಲಾಲ್ ಬಹಾದ್ದೂರ್ ಶಾಸ್ತ್ರಿ ಕಾಲೇಜಿನ ಪ್ರಿನ್ಸಿಪಾಲರಾಗಿ, ಆ ಹೊಸ ಕಾಲೇಜನ್ನು ಕಟ್ಟಿದರು. ೧೯೬೮ರಲ್ಲಿ ಆ ಹುದ್ದೆಯನ್ನು ತ್ಯಜಿಸಿ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪ್ರಿನ್ಸಿಪಾಲರಾದರು. ೧೯೭೧ರಲ್ಲಿ ಅವರ ಬದುಕಿನಲ್ಲಿ ಒಂದು ಅನಿರೀಕ್ಷಿತ ತಿರುವು ಬಂತು. ಲೋಕಸಭಾ ಚುನಾವಣೆಯಲ್ಲಿ ೯ ಪಕ್ಷಗಳ ಒಕ್ಕೂಟದ ಪರವಾಗಿ ಜನಸಂಘದ ಅಭ್ಯರ್ಥಿಯಾಗಿ ಬೆಂಗಳೂರಿನಿಂದ ಸ್ಪರ್ಧಿಸಬೇಕೆಂಬ ಸ್ನೇಹಿತರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದರು. ಆಗ ವಿಜೃಂಭಿಸುತ್ತಿದ್ದ `ಇಂದಿರಾ ಅಲೆ'ಯ ಅಬ್ಬರದಲ್ಲಿ ಅವರಿಗೆ ಸೋಲಾಯಿತು. ತತ್ಪರಿಣಾಮವಾಗಿ ಪೂರ್ಣಪ್ರಜ್ಞ ಕಾಲೇಜಿನ ಪ್ರಿನ್ಸಿಪಾಲ್ ಹುದ್ದೆಗೆ ರಾಜಿನಾಮೆ ಕೊಡಬೇಕಾಯಿತು. ಅನಂತರ ದೆಹಲಿಯ ನ್ಯಾಶನಲ್ ಬುಕ್ ಟ್ರಸ್ಟ್ ನಲ್ಲಿ ಉಪನಿರ್ದೇಶಕರಾಗಿ ಸ್ವಲ್ಪ ಕಾಲ ದುಡಿದ ಬಳಿಕ ಶಿಮ್ಲಾದ `ಇಂಡಿಯನ್ ಇನ್ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡಿಸ್' ಸಂಸ್ಥೆಯಲ್ಲಿ ಮೂರು ವರ್ಷ ವಿಸಿತ್ಟಿಂಗ್ ಫೆಲೊ ಆಗಿ ಕೆಲಸ ಮಾಡಿದರು. ನವ್ಯದ ನಾಯಕತ್ವ ೧೯೫೫ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದ ಶಿಖರದಲ್ಲಿದ್ದರು. ಹೊಸ ಪೀಳಿಗೆಯ ಯು.ಆರ್.ಅನಂತಮೂರ್ತಿ, ಎ.ಕೆ. ರಾಮಾನುಜನ್, ರಾಮಚಂದ್ರ ಶರ್ಮಾ, ನಿಸಾರ್ ಅಹಮದ್, ಲಂಕೇಶ್, ತೇಜಸ್ವಿ, ಲಕ್ಶ್ಮಿ ನಾರಾಯಣ ಭಟ್ಟ, ಕೆ.ವಿ.ತಿರುಮಲೇಶ್, ಎಚ್.ಎಂ. ಚೆನ್ನಯ್ಯ, ಗಿರಡ್ಡಿ ಗೋವಿಂದರಾಜ, ಸಿದ್ಧಲಿಂಗ ಪಟ್ಟಣಶೆಟ್ಟಿ ಚಂದ್ರಶೇಖರ ಪಾಟೀಲ, ಎಂ.ಎನ್. ವ್ಯಾಸರಾವ್, ಜಯಂತ ಕಾಯ್ಕಿಣಿ, ಕ.ವೆಂ.ರಾಜಗೋಪಾಲ್, ಮಾಧವ ಕುಲಕರ್ಣಿ, ಜಿ.ಎಚ್. ನಾಯಕ್, ಶ್ರೀಕೃಷ್ಣ ಆಲನಹಳ್ಳಿ ನಾ.ಮೊಗಸಾಲೆ ಮುಂತಾದ ಅನೇಕ ಲೇಖಕರು ತಮ್ಮದೇ ಆದ ರೀತಿಯಲ್ಲಿ ನವ್ಯಪ್ರಜ್ಞೆಯ ಸಾಹಿತ್ಯವನ್ನು ರಚಿಸಿದರು. ಇವರಲ್ಲಿ ಚಂಪಾ ಮತ್ತು ತೇಜಸ್ವಿ ಮುಂತಾದ ಕೆಲವರು ಕೆಲಕಾಲದ ನಂತರ ನವ್ಯ ಮಾರ್ಗದಿಂದ ಕೊಂಚ ಭಿನ್ನವಾದ ಮಾರ್ಗವನ್ನು ಹಿಡಿದರೂ ಆರಂಭದಲ್ಲಿ ಅಡಿಗರು ಪ್ರವರ್ತಿಸಿದ ನವ್ಯತೆಯ ಪ್ರಭಾವಾದಲ್ಲೇ ತಮ್ಮ ಸೃಜನಶೀಲತೆಯನ್ನು ರೂಪಿಸಿಕೊಂಡುದುದನ್ನು ಮರೆಯುವಂತಿಲ್ಲ. ಕವನ ಸಂಕಲನಗಳು ಭಾವತರಂಗ (೧೯೪೬) ಕಟ್ಟುವೆವು ನಾವು (೧೯೪೮) ನಡೆದು ಬಂದ ದಾರಿ (೧೯೫೨) ಚಂಡೆಮದ್ದಳೆ (೧೯೫೪) ಭೂಮಿಗೀತ (೧೯೫೯) ವರ್ಧಮಾನ (೧೯೭೨) ಇದನ್ನು ಬಯಸಿರಲಿಲ್ಲ (೧೯೭೫) ಮೂಲಕ ಮಹಾಶಯರು (೧೯೮೦) ಬತ್ತಲಾರದ ಗಂಗೆ (೧೯೮೩) ಮಾವೋ ಕವನಗಳು ಚಿಂತಾಮಣಿಯಲ್ಲಿ ಕಂಡ ಮುಖ (೧೯೮೭) ಸುವರ್ಣ ಪುತ್ಥಳಿ (೧೯೯೦) ಬಾ ಇತ್ತ ಇತ್ತ(೧೯೯೩) ೧೯೩೭ರಿಂದ ೧೯೭೬ರವರೆಗಿನ ಎಲ್ಲ ಸಂಕಲನಗಳನ್ನೂ ಒಳಗೊಂಡ ಅವರ ಸಮಗ್ರ ಕಾವ್ಯ (ಐ.ಬಿ.ಎಚ್. ಪ್ರಕಾಶನ, ೧೯೮೭) ಪ್ರಕಟವಾಗಿದೆ. ಅವರ ಈ ಎಲ್ಲ ವೈಚಾರಿಕ ಲೇಖನಗಳೂ "ಸಮಗ್ರ ಗದ್ಯ" (ಸಾಕ್ಷಿ ಪ್ರಕಾಶನ, ೧೯೭೭) ಎಂಬ ಸಂಪುಟವೊಂದರಲ್ಲಿ ಪ್ರಕಟವಾಗಿದೆ. ಕಾದಂಬರಿಗಳು : - ಅನಾಥೆ, ಆಕಾಶದೀಪ ಎಂಬ ಎರಡು ಕಾದಂಬರಿಗಳನ್ನೂ ಬರೆದಿದ್ದಾರೆ. ಅನೇಕ ಅನುವಾದ ಕೃತಿಗಳೂ ಪ್ರಕಟವಾಗಿವೆ. ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ರಾಜಕೀಯ -ಹೀಗೆ ವಿವಿಧ ವಿಷಯಗಳ ಬಗ್ಗೆ ಅಡಿಗರು ಅನೇಕ ಲೇಖನಗಳನ್ನು ಬರೆದಿದ್ದಾರೆ. ೧೯೮೭ರಲ್ಲಿ ಮತ್ತೊಮ್ಮೆ ಅಡಿಗರ ಸಮಗ್ರ ಕಾವ್ಯ ಪ್ರಕಟವಾಯಿತು. ಐಬಿಎಚ್ ಪ್ರಕಾಶನ ಇದನ್ನು ಪ್ರಕಟಿಸಿತ್ತು. ೧೯೯೯ರಲ್ಲಿ ಅಡಿಗರ ಎಲ್ಲಾ ಕವನಗಳು ಇರುವ ಸಮಗ್ರ ಕವನಗಳ ಪೂರ್ಣ ಆವೃತ್ತಿಯನ್ನು ಸಪ್ನ ಬುಕ್ ಹೌಸ್ ಪ್ರಕಟಿಸಿತು. ಅಡಿಗರು ಕೆಲವು ಸಣ್ಣ ಕಥೆಗಳನ್ನೂ ಬರೆದಿದ್ದಾರೆ. ಯಕ್ಷಗಾನದ ಪ್ರಭಾವ ಅಡಿಗರ ಮನೆಯಲ್ಲಿ ಸಾಹಿತ್ಯಕ್ಕೆ ಪ್ರೇರಕವಾದ ವಾತಾವರಣ ಇತ್ತು. ಅಡಿಗರ ತಂದೆ, ಅಜ್ಜ, ಅಜ್ಜಿ, ಸೋದರತ್ತೆಯರು, ಚಿಕ್ಕಪ್ಪ-ಎಲ್ಲರಿಗೂ ಪದ್ಯ ರಚನೆ ಮಾಡುವ ಅಭ್ಯಾಸವಿತ್ತು. ತಂದೆ ರಾಮಪ್ಪ ಅಡಿಗರು ಸಂಸ್ಕೃತದಲ್ಲಿ ಶ್ಲೋಕಗಳನ್ನೂ, ಕನ್ನಡದಲ್ಲಿ ದೇಶಭಕ್ತಿ ಗೀತೆಗಳನ್ನೂ ರಚಿಸುತ್ತಿದ್ದರು. ಯಕ್ಶಗಾನದ ತಾಳಮದ್ದಲೆಗಳಲ್ಲಿ ಅರ್ಥ ಹೇಳುತ್ತಿದ್ದರು. ಸೋದರತ್ತೆ ಪ್ರತಿ ರಾತ್ರಿಯೂ ಗದುಗಿನ ಭಾರತ, ಜೈಮಿನಿ ಭಾರತಗಳನ್ನು ರಾಗವಾಗಿ ಹಾಡುತ್ತಿದ್ದರು. ಇವರಲ್ಲೊಬ್ಬರಾದ ಮೂಕಾಂಬು(ಮೂಕಜ್ಜಿ) ಎಂಬವರು ಸ್ವತಃ ಪದ್ಯಗಳನ್ನು ರಚಿಸುತ್ತಿದ್ದರು. ಅಜ್ಜಿಯ ತಮ್ಮ ಬವಳಾಡಿ ಹಿರಿಯಣ್ಣ ಹೆಬ್ಬಾರ ಎಂಬವರು ಹೆಸರಾಂತ ಯಕ್ಷಗಾನದ ಅರ್ಥಧಾರಿಯಾಗಿದ್ದರು. ಇವರ ವಂಶಜರಾದ ಪ್ರೊ.ಬಿ.ಎಚ್. ಶ್ರೀಧರ್ ಅವರು ಮುಂದೆ ಕನ್ನಡದಲ್ಲಿ ಓರ್ವ ಗಣ್ಯ ಕವಿಯಾಗಿ ಪ್ರಸಿದ್ಧರಾದರು. ಕರಾವಳಿಯ ಮಹಾನ್ ಕಲೆ ಯಕ್ಷಗಾನವೇ ಅಡಿಗರ ಮೇಲೆ ಗಾಢ ಪ್ರಭಾವ ಬೀರಿತ್ತು. ಅವರ ಪ್ರಸಿದ್ಧ ಕವನ `ಗೊಂದಲಒಉರ'ದಲ್ಲಿ ಗೊಂದಲಾಸುರನ ಪ್ರವೇಶದ ಸಂದರ್ಭ - ಯಕ್ಷಗಾನದಲ್ಲಿ ರಂಗಸ್ಥಳ ಪ್ರವೇಶ ಮಾಡುವ ರಾಕ್ಷಸನ ಪ್ರವೇಶ ಶೈಲಿಯಲ್ಲಿದೆ. `ಅಜ್ಞಾತ ವೇಷ' ಎಂಬ ಕವನದಲ್ಲಿ ವೇಷಭೂಷಣಗಳ ಪೆಟ್ಟಿಗೆಯನ್ನು ಹೊರುವ ಬಡ ಕೂಲಿಗಳ ಪ್ರತಿಮೆಯನ್ನು ಪ್ರಜಾಸತ್ತೆಯಲ್ಲಿ ಪುಢಾರಿಗಳ ಚಾಕರಿ ಮಾಡುವ ಜನಸಾಮಾನ್ಯರ ಪ್ರತೀಕವಾಗಿ ಬಳಸಿದ್ದಾರೆ. ಇಂತಹ ಅನೇಕ ಉದಾಹರಣೆಗಳನ್ನು ಕೊಡಬಹುದು ಸಾಹಿತ್ಯ ಶೈಲಿ ಅಡಿಗರ ಸಮಗ್ರ ಕಾವ್ಯವನ್ನು ಓದಿದಾಗ "ಆಧುನಿಕ ಮಹಾಕಾವ್ಯ"ವೊಂದನ್ನು ಓದಿದ ಅನುಭವವಾಗುತ್ತದೆ. ಇವರ ಕಾವ್ಯದ ನಾಯಕ ಇಪ್ಪತ್ತನೇ ಶತಮಾನದ ಸ್ವಾತಂತ್ರ್ಯೋತ್ತರ ಭಾರತದ ಆಧುನಿಕ ಸಂವೇದನೆಯ ವ್ಯಕ್ತಿ. ಸ್ವತಂತ್ರ ಭಾರತದ ರಾಜಕೀಯ, ಸಾಮಾಜಿಕ , ಸಾಂಸ್ಕೃತಿಕ ವಾಸ್ತವ ಇವರ ಕಾವ್ಯದಲ್ಲಿ ಆಕಾರ ಪಡೆದಂತೆ ಬಹುಶಃ ಕನ್ನಡದಲ್ಲಿ ಮತ್ತೆ ಯಾರ ಕಾವ್ಯದಲ್ಲೂ ಕಾಣಿಸಿಕೊಂಡಿಲ್ಲವೆನ್ನಬಹುದು. ಅಡಿಗರ ಕಾವ್ಯನಾಯಕನ ಕೆಲವು ಲಕ್ಷಣಗಳನ್ನು ಹೀಗೆ ಗುರ್ತಿಸಬಹುದು. ಸಾಂಪ್ರದಾಯಿಕವಾದ ಒಪ್ಪಿತ ಮೌಲ್ಯಗಳ ಬಗ್ಗೆ ಈತನಿಗೆ ಆರಾಧಕ ಮನೋಭಾವವಿಲ್ಲ. ಹಾಗೆಂದು ಅವುಗಳನ್ನು ಈತ ಸಾರಾಸಗಟಾಗಿ ತಿರಸ್ಕರಿಸುವಂಥವನೂ ಅಲ್ಲ. ಚಿಕಿತ್ಸಕ ಮನೋಭಾವದ ಈತನಿಗೆ ಸಮಕಾಲೀನ ಅಗತ್ಯಕ್ಕೆ ತಕ್ಕಂತೆ ಪರಂಪರೆಯನ್ನು ಸೂಕ್ತವಾಗಿ ಒಗ್ಗಿಸಿಕೊಳ್ಳುವುದರ ಬಗ್ಗೆ ಆಸಕ್ತಿ. ಅನೇಕ ನವ್ಯ ಕೃತಿಗಳಲ್ಲಿ ಕಾಣಿಸುವಂತೆ ಅಡಿಗರ ನಾಯಕ ಸೂಕ್ಷ್ಮ ಮನಸ್ಸಿನ ದುರ್ಬಲ ವ್ಯಕ್ತಿಯಲ್ಲ. ಈತನೊಬ್ಬ ಹೋರಾಟಗಾರ, ಎಲ್ಲದರ ಬಗ್ಗೆ ಬಂಡೇಳುವಂಥ ಬಂಡಾಯಗಾರ. ಎಲ್ಲ ಬಗೆಯ ಸರ್ವಾಧಿಕಾರೀ ಶಕ್ತಿಗಳ ವಿರುದ್ಧವೂ ಈತ ಪ್ರತಿಭಟಿಸುತ್ತಾನೆ. ಈ ಪ್ರತಿಭಟನೆ ಆತ್ಮ ವಿಶ್ಲೇಷಣೆಯ ಪ್ರಕ್ರಿಯೆಯೂ ಆಗುತ್ತದೆ. ಎಲ್ಲ ರೀತಿಯ ಆಕ್ರಮಣಗಳನ್ನು ಎದುರಿಸಿ ವ್ಯಕ್ತಿವಿಶಿಷ್ಟತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಈತನ ತುಡಿತ. ಅಡಿಗರ ಆರಂಭದ ಕವಿತೆಗಳ ಮುಖ್ಯಗುಣ -ಭಾವತೀವ್ರತೆ. ಕೆಚ್ಚು, ಹೋರಾಟದ ಆಹ್ವಾನ ಅಡಿಗರ ಮನೋಭಾವಕ್ಕೆ ಸಹಜವಾದುದೆನ್ನಿಸಿದರೂ ಅದು ಪ್ರಕಟಗೊಂಡಿರುವ ಬಗೆ ಸಂಪೂರ್ಣವಾಗಿ ಭಾವಾವೇಶದಿಂದ ಬಂದದ್ದು. ಮುಂದೆ ಅಡಿಗರು ಗೆಲ್ಲಲು ಬಯಸಿದ್ದು, ವಿರೋಧಿಸಿದ್ದು, ಇಂಥ ರೀತಿಯನ್ನೇ. ಅಡಿಗರ ಆವೇಶ ಉತ್ಸಾಹ ಕ್ರಮೇಣ ವ್ಯಾವಹಾರಿಕ ಜಗತ್ತಿನ ಆಕ್ರಮಣದಿಂದಾಗಿ ಆಘಾತಕ್ಕೊಳಗಾದಂತೆ ಕಂಡು ಬರುತ್ತದೆ. ಬಾಲ್ಯದ ಮುಗ್ಧಲೋಕ, ಹದಿಹರಯದ ಹೊಂಗನಸಿನ ಜಗತ್ತು ಒಡೆದು ಛಿದ್ರವಾಗಿ ಕವಿಮನಸ್ಸು ವ್ಯಗ್ರವಾಗುತ್ತದೆ, ದಿಕ್ಕೆಡುತ್ತದೆ. ಹತಾಶೆಯ ಸ್ಥಿತಿಯಲ್ಲಿ ಕವಿ ಮನಸ್ಸು ನಿಷ್ಠುರವಾಗಲು ಪ್ರಯತ್ನಿಸುತ್ತದೆ. ಇಂಥ ಸ್ಥಿತಿಯಲ್ಲಿ ಹರಯದ ಮನಸ್ಸನ್ನು ಸಹಜವಾಗಿ ಸೆಳೆಯಬಹುದಾಗಿದ್ದ ಹೆಣ್ಣಿನ ಸ್ನೇಹ ಸಹ ಕವಿಗೆ ಕಪಟವೆನ್ನಿಸುತ್ತದೆ. ದಿನನಿತ್ಯದ ನೋವು, ನಲಿವು, ಉತ್ಸಾಹ, ಚೆಲುವು ಇವೆಲ್ಲವೂ ಅವರ ಕಾವ್ಯದಲ್ಲಿ ಇಲ್ಲ ವೆನ್ನುವಷ್ಟು ಕಡಿಮೆ. ಕವಿ ಬದುಕಿನ ಸ್ನೇಹ, ಪ್ರೀತಿ, ಚೆಲುವು ಒಲವುಗಳಿಗೆ ಜಡರೇನೂ ಅಲ್ಲ. ಅವರ ಮನಸ್ಸು ಅದರಿಂದ ಮುದಗೊಳ್ಳುತ್ತದೆ. ಆದರೆ ಒಟ್ಟು ಕಾವ್ಯದ ಸಂದರ್ಭದಲ್ಲಿ ಅಂಥ ಕವಿತೆಗಳು ಅಮುಖ್ಯವಾಗುತ್ತವೆ. ಅಡಿಗರದು ಮುಖ್ಯವಾಗಿ ಧ್ಯಾನರೂಪೀ ಮನಸ್ಸು. ಅವರದೇ ಮಾತಿನಲ್ಲಿ ಹೇಳುವುದಾದರೆ -"ಹುತ್ತಗಟ್ಟಿದ ಚಿತ್ತ". ಅಡಿಗರ ಕಾವ್ಯದುದ್ದಕ್ಕೂ ಕಂಡು ಬರುವ ಪ್ರಧಾನ ಅಂಶಗಳಲ್ಲೊಂದು ಭೂಮಿ ಆಕಾಶಗಳ ಸೆಳೆತಕ್ಕೆ ಸಿಕ್ಕ ಮಾನವನ ಸ್ಥಿತಿ. ಇದು ದೇಹ-ಮನಸ್ಸುಗಳ ಸಂಘರ್ಷವೂ ಹೌದು. ಆದರ್ಶ ವಾಸ್ತವಗಳ ನಡುವಿನ ತಿಕ್ಕಾಟವೂ ಹೌದು. ಅನೇಕ ಕವಿತೆಗಳಲ್ಲಿ ಮತ್ತೆ ಮತ್ತೆ ವ್ಯಕ್ತವಾಗುವ ಈ ಸಂಘರ್ಷ, ನೆಲ ಮುಗಿಲಿನ ಸೆಳೆತ ಸೇಂದ್ರಿಯವಾಗಿ ಅಭಿವ್ಯಕ್ತಿ ಪಡೆಯುವುದು "ಮೋಹನ ಮುರಲಿ" ಕವಿತೆಯಲ್ಲಿ. ಅಡಿಗರ ಕಾವ್ಯ ಬೆಳವಣಿಗೆಯಲ್ಲಿ ಇದು ಮುಖ್ಯ ಕವಿತೆ. ಲೌಕಿಕ ಸುಖದಲ್ಲಿ ತೃಪ್ತಿ ಪಡೆದಿದ್ದ ಮನಸ್ಸು ಅಲೌಕಿಕ ಸೆಳೆತಕ್ಕೆ ಒಳಗಾಗಿರುವ ಚಿತ್ರವನ್ನು ಈ ಕವಿತೆ ಸೊಗಸಾಗಿ ಚಿತ್ರಿಸುತ್ತದೆ. ಸ್ನೇಹ-ಪ್ರೀತಿ, ಕೋಪ-ತಾಪ, ಅಳು-ನಗು ಎಲ್ಲವನ್ನು ನಿರಾಕರಿಸಿ ಜನವಿದೂರ ಹೋಗ ಬಯಸುವ ಕಾವ್ಯ ಬದುಕನ್ನೆ ನಿರಾಕರಿಸುವಂಥದಾಗಿ ತೋರುವುದು ಮೇಲ್ನೋಟಕ್ಕೆ ಸಹಜ. ಆದರೆ ಮೇಲ್ಪಪದರದ ಈ ಆಕ್ರೋಶದ ಹಿಂದಿನ ಆಳವಾದ ವಿಷಾದ ವಾಸ್ತವ ಬದುಕಿನ ಸ್ವೀಕರಣೆಯ ಕಡೆ ಮುಖಮಾಡಿದೆ. ಬದುಕಿನಲ್ಲಿ ಹಿರಿಯಾಸೆ ಹೊತ್ತ ಮಹತ್ವಾಂಕ್ಷೆಯ ಕವಿ ಮೋಹದ ಸುಳಿಯೊಳಗೆ ಸಿಲುಕಬಾರದೆಂಬ ಎಚ್ಚರದಿಂದ ಇವೆಲ್ಲವನ್ನೂ ಮೀರಲು ಬಯಸುತ್ತಾರೆ. ಕವಿಯ ಈ ಮಹತ್ವಾಕಾಂಕ್ಷೆ ಉನ್ನತವಾದುದನ್ನು ತನ್ನದಾಗಿಸಿಕೊಳ್ಳಬೇಕೆಂಬ ಬಯಕೆ –ಇದರಿಂದಾಗಿ ಅಡಿಗರ ಕಾವ್ಯ ದೈನಿಕ ಸಹಜ ವಿವರಗಳಿಂದ, ಬದುಕಿನ ವೈವಿಧ್ಯದಿಂದ, ಕೌಟುಂಬಿಕ ಜಗತ್ತಿನಿಂದ ವಂಚಿತವಾಗುತ್ತದೆ. ದಿನನಿತ್ಯದ ನೋವು, ನಲಿವು, ಉತ್ಸಾಹ, ಚೆಲುವು ಇವೆಲ್ಲವೂ ಅವರ ಕಾವ್ಯದಲ್ಲಿ ಇಲ್ಲವೆನ್ನುವಷ್ಟು ಕಡಿಮೆ. ಕವಿ ಬದುಕಿನ ಸ್ನೇಹ, ಪ್ರಿತಿ, ಚೆಲುವು, ಒಲವುಗಳಿಗೆ ಜಡರೇನು ಅಲ್ಲ. ಅವರ ಮನಸ್ಸು ಅದರಿಂದ ಮುದಗೊಳ್ಳುತ್ತದೆ. ಆದರೆ ಒಟ್ಟು ಕಾವ್ಯದ ಸಂದರ್ಭದಲ್ಲಿ ಅಂಥ ಕವಿತೆಗಳು ಅಮುಖ್ಯವಾಗುತ್ತವೆ. ಅಡಿಗರದು ಮಖ್ಯವಾಗಿ ಧ್ಯಾನರೂಪಿ ಮನಸ್ಸು, ಅವರ ಮಾತಿನಲ್ಲೇ ಹೇಳುವುದಾದರೆ – ‘ಹುತ್ತಗಟ್ಟಿದ ಚಿತ್ತ’. ಬದುಕಿನಲ್ಲಿ ತಾನು ಅನುಭವಿಸಿದ ನೋವು, ಅಪಮಾನ, ಪ್ರೀತಿಯ ಕೊರತೆ-ಸ್ವಭಾವತಃ ಅಂತರ್ಮುಖಿಯಾಗುವಂತೆ ಮಾಡುತ್ತವೆ. ಆದರೆ ಈ ಅಂತರ್ಮುಖತೆ ಹೊರಜಗತ್ತಿನಿಂದ ಸಂಪರ್ಕ ಕಡಿದುಕೊಳ್ಳದೆ, ಅದನ್ನು ಅರ್ಥ ಮಾಡಿಕೊಳ್ಳುವ ಸಮರ್ಥ ರೀತಿಯಲ್ಲಿ ಅಡಿಗರ ಕಾವ್ಯ ರೂಪುಗೊಳ್ಳುತ್ತದೆ. ಆದ್ದರಿಂದಲೇ ಅಡಿಗರ ನಂತರದ ಕಾವ್ಯ ಏಕಕಾಲಕ್ಕೆ ವೈಯುಕ್ತಿಕವೂ, ಸಾಮಾಜಿಕವೂ ಆಗಿಬಿಡುತ್ತದೆ. ಈ ಸ್ವವಿಮರ್ಶೆ ಅಡಿಗರ ಕಾವ್ಯದ ಪ್ರಧಾನವಾದ ಅಂಶ. ತನ್ನನ್ನು ಅರ್ಥಮಾಡಿಕೊಳ್ಳುತ್ತಲೇ, ಸಮಾಜವನ್ನೂ, ಬದುಕನ್ನೂ ಅರ್ಥಮಾಡಿಕೊಳ್ಳುವ ಕ್ರಮ- ಅಡಿಗರ ಕಾವ್ಯರೀತಿ. ದರ್ಶನ ಅಡಿಗರ ಶೋಧನೆ -ಮರ್ತ್ಯದಲ್ಲಿಯೇ ಅಮರತೆಯ ಫಲ ಸಾಧಿಸುವ ಶೋಧನೆ -ಉದ್ದಕ್ಕೂ ಆತ್ಮಶೋಧನೆಯಾಗಿಯೇ ಬೆಳೆಯುತ್ತ ಹೋಗುತ್ತದೆ. ಈ ನೆಲದಲ್ಲಿಯೇ ಹುಟ್ಟಿದ ರಾಮಕೃಷ್ಣ, ಬುದ್ಧ, ಗಾಂಧಿ ದೊಡ್ಡವರಾದರು. ಮಹಾತ್ಮರಾದರು. ನಾನು ಮಾತ್ರ ಹಾಗೆಯೇ ಉಳಿದೆನೇಕೆ? ಪ್ರತಿಯೊಬ್ಬ ವ್ಯಕ್ತಿಯೂ ತನಗೆ ತಾನೇ ವಿಕಾಸವಾಗಬೇಕು. ಈ ನೆಲದಲ್ಲಿಯೇ, ನೆಲದ ಪ್ರಜ್ಞೆ ಹೀರಿಯೇ ಬೆಳೆದು ದೊಡ್ಡವನಾಗಬೇಕು, ಉನ್ನತ ಚೇತನವಾಗಿ ರೂಪುಗೊಳ್ಳಬೇಕು -ಇದೇ ಅಡಿಗರ ದರ್ಶನ. ಅಡಿಗರ ದೃಷ್ಟಿಯಲ್ಲಿ ಸಮಾಜದ ಮೂಲ ಘಟಕ ವ್ಯಕ್ತಿ. ಯಾವ ಬಂಡಾಯವಾಗು ವುದಿದ್ದರೂ ಅದು ವ್ಯಕ್ತಿಯಲ್ಲಿ. ಮಾನವನ ಹೆಚ್ಚಳ ಅವನ ವ್ಯಕ್ತಿತ್ವದ ವಿಕಾಸದಲ್ಲಿದೆ. ಪ್ರತಿಯೊಬ್ಬರ ವ್ಯಕ್ತಿತ್ವ ಬದುಕಲ್ಲಿ ಪ್ರತ್ಯಕ್ಷವಾದರೆ, ಬದುಕಿಗೆ ವಿವಿಧತೆ ಬರುತ್ತದೆ. ಸಮಾಜ ಈ ವ್ಯಕ್ತಿತ್ವದ ಪ್ರತ್ಯಕ್ಷತೆಗೆ ವಿರೋಧವಾಗಿ ಅಡಚಣೆಗಳನ್ನು ಒಡ್ಡುತ್ತಲೇ ಇರುತ್ತದೆ. ಅದಕ್ಕಾಗಿ ಸತತ ಬಂಡಾಯ ಮಾಡಬೇಕು. ಅಲ್ಲದೆ, ಅಡಿಗರ ಮಾಗಿದ ದೃಷ್ಟಿಯಲ್ಲಿ ಕ್ರಾಂತಿ ವೈಯಕ್ತಿಕವಾಗಿಯೇ ಆಗಬೇಕು. ವ್ಯಕ್ತಿತ್ವ ವಿಕಾಸದ ಹಾದಿಯಲ್ಲಿ ಸಾಮಾಜಿಕವಾದ ತನ್ನ ಮುಖವನ್ನೂ ಹುಡುಕಿಕೊಳ್ಳಬೇಕಾಗುತ್ತದೆ ಎಂಬ ದರ್ಶನ ಅವರ ಕಾವ್ಯ ಬೆಳವಣಿಗೆಯ ಮತ್ತೊಂದು ಮುಖ್ಯ ಹಂತವೆನ್ನಬಹುದು. ಇಡೀ ಮಾನವ ಜನಾಂಗದ ಇತಿಹಾಸವನ್ನೂ ಸಮಕಾಲೀನ ಸ್ಥಿತಿಯನ್ನೂ ಭಿತ್ತಿಯಾಗುಳ್ಳ ಅಡಿಗರ ಕಾವ್ಯ "ವ್ಯಕ್ತಿತ್ವ ವಿಕಾಸದ ಹೋರಾಟ"ವನ್ನು ಚಿತ್ರಿಸುವ ಮಹಾಕಾವ್ಯವಾಗಿದೆ. ನವೋದಯ ಕಾವ್ಯದಲ್ಲಿ ಅನುಕರಣೆಯೇ ಹೆಚ್ಚಾಗುತ್ತಿದ್ದ ಕಾಲದಲ್ಲಿ, ಹೊಸ ಕಾಲದ ಹೊಸ ಅನುಭವಗಳಿಗೆ ಸ್ಪಂದಿಸುವ ಕಾವ್ಯವನ್ನು ರಚಿಸಿ ಹೊಸದೊಂದು ಮಾರ್ಗವನ್ನೇ ತೆರೆದ ಕವಿ ಅಡಿಗರು. ಸಂದೇಶ ಒಂದು ಕವನ ಒಂದು ಶತಮಾನದ ಮೇಲೆಯೂ ಸಂತೋಷ ಕೊಟ್ಟು ಜುಮ್ಮು ದಟ್ಟಿಸುವುದು ಸಾಧ್ಯವಾದರೆ, ಒಂದು ಶತಮಾನದ ಹಿಂದೆ ಇದ್ದ ಕಾವ್ಯಪ್ರಿಯನೊಬ್ಬ ಎದ್ದು ಬಂದು ಇದನ್ನು ಓದಿ ಮೆಚ್ಚುವುದು ಸಾಧ್ಯವಾದರೆ ಆಗ ಮಾತ್ರ ಕೃತಿ ಕೃತಾರ್ಥ. ದೇಶದ ಪರಿಸ್ಥಿತಿ ತುಂಬ ಕೆಡುತ್ತ ಬರುತ್ತಿದೆ -ಆರ್ಥಿಕವಾಗಿ, ನೈತಿಕವಾಗಿ ಯಾವ ಕಡೆ ಹೋಗುತ್ತದೆ, ಏನಾಗುತ್ತದೆ, ತಿಳಿಯುವುದಿಲ್ಲ. ಹುಡುಗನಲ್ಲಿ ಕಪಿ ಅಂಶವೂ ಇದೆ, ಆಂಜನೇಯನಂತೆ ಅದ್ಭುತವಾಗಿ ಬೆಳೆಯಬಲ್ಲ ಸಾಧ್ಯತೆಯೂ ಇದೆ -"ಹನುಮದ್ವಿಲಾಸ". ಕಾವ್ಯ ಸಂಪ್ರದಾಯಬದ್ಧವಾಗಬಾರದು, ಆಗ ಕಾವ್ಯದಲ್ಲಿ ಮುಗ್ಗಲು ವಾಸನೆ ಬರುತ್ತದೆ. ಪಂಪ ಕುಮಾರವ್ಯಾಸರನ್ನು ಓದಿ ಸಂತೋಷಪಡಲಾರದವನು, ಆಧುನಿಕ ಕಾವ್ಯವನ್ನೋದಿ ನಿಜವಾಗಿಯೂ ಪುಳಕಿತನಾಗುತ್ತಾನೆ ಎಂದು ನಂಬುವುದು ಕಷ್ಟ. ಹೊಸತು ಹಳೆಯದರ ಜೊತೆಗೂ, ಹಳೆಯದು ಹೊಸದರ ಜೊತೆಗೂ ಹೊಂದಿಕೊಳ್ಳದೆ ಬದುಕು ಸುಸಂಸ್ಕೃತವಾಗುವುದಿಲ್ಲ, ಕಾವ್ಯವು ಶ್ರೇಷ್ಠವಾಗುವುದಿಲ್ಲ. ಅಡಿಗರಿಗೆ ಸಂದ ಪ್ರಶಸ್ತಿಗಳು ೧೯೬೮ರಲ್ಲಿ ಅಡಿಗರಿಗೆ ೫೦ ವರ್ಷ ತುಂಬಿದ ಸಂದರ್ಭದಲ್ಲಿ ಉಡುಪಿಯಲ್ಲಿ ಪ್ರೊ. ಕು.ಶಿ.ಹರಿದಾಸ ಭಟ್ಟ ಮತ್ತು ವಿಜಯನಾಥ ಶೇಣೈ ಮುಂತಾದ ಸಾಹಿತ್ಯಾಭಿಮಾನಿಗಳು ಒಂದು ಅಪೂರ್ವ ಸಮಾರಂಭವನ್ನು ಏರ್ಪಡಿಸಿದರು. ಅದರಲ್ಲಿ ಹೊಸ ಪೀಳಿಗೆಯ ಮಹತ್ವದ ಕವಿ, ಸಾಹಿತಿ, ವಿಮರ್ಶಕರುಗಳಾದ ಲಂಕೇಶ್, ಚಂದ್ರಶೇಖರ ಕಂಬಾರ,ಎಂ.ಜಿ. ಕೃಷ್ಣಮೂರ್ತಿ, ಶಾಂತಿನಾಥ ದೇಸಾಯಿ, ಜಿ. ಎಚ್. ನಾಯಕ, ಕಿ ರಂ. ನಾಗರಾಜ. ಗಿರಡ್ಡಿ ಗೋವಿಂದರಾಜ, ಬನ್ನಂಜೆ ಗೋವಿಂದಾಚರ್ಯ, ಡಿ. ಎಸ್. ರಾಯಕರ್ ಮುಂತಾದವರು ಭಾಗವಹಿಸಿದ್ದರು. ವಿಮರ್ಶಕ ನಿಸ್ಸಿಂ ಇಝೆಕಿಲ್ ಅವರು` ಅಡಿಗರು ಕನ್ನಡದಲ್ಲಿ ಬರೆಯುತ್ತಿರುವ ಒಬ್ಬ ಶ್ರೇಷ್ಠ ಭಾರತೀಯ ಕವಿ' ಎಂದು ಕೊಂಡಾಡಿದರು. ೧೯೭೪ರಲ್ಲಿ ರಾಜ್ಯ ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಬಂತು. ೧೯೭೫ರಲ್ಲಿ ಅಡಿಗರಿಗೆ `ವರ್ಧಮಾನ'ಕವನ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಬಂತು. ೧೯೭೯ರಲ್ಲಿ ಕೇರಳದ ಪ್ರತಿಷ್ಠಿತ `ಕುಮಾರ್ ಸಮ್ಮಾನ್' ಪ್ರಶಸ್ತಿ ಲಭ್ಯವಾಯಿತು. ೧೯೮೦ರಲ್ಲಿ `ಸಮಗ್ರ ಕಾವ್ಯಕ್ಕೆ ಮೂಡಬಿದ್ರೆಯ `ವರ್ಧಮಾನ' ಪ್ರಶಸ್ತಿ ದೊರೆಯಿತು. ೧೯೮೨ರಲ್ಲಿ ಪ್ಯಾರಿಸ್, ಯುಗೋಸ್ಲಾವಿಯಗಳಲ್ಲಿ ನಡೆದ ವಿಶ್ವಕವಿ ಸಮ್ಮೇಳನದಲ್ಲಿ ಆಹ್ವಾನಿತರಾಗಿ ಭಾಗವಹಿಸಿದರು. ೧೯೮೬ರಲ್ಲಿ ಮಧ್ಯಪ್ರದೇಶ ಸರಕಾರ ಆರಂಭಿಸಿದ ಪ್ರಥಮ `ಕಬೀರ್ ಸನ್ಮಾನ್' ಅಡಿಗರ ಮಡಿಲಿಗೆ ಬಂತು. ೧೯೮೮ರಲ್ಲಿ ಥ್ಯಾಲಂಡಿನ ಬ್ಯಾಂಕಾಕ್ ನಗರದಲ್ಲಿ ನಡೆದ ಜಾಗತಿಕಕವಿ ಸಮ್ಮೇಳನದಲ್ಲಿ ವರ್ಲ್ಡ್ ಅಕಾಡೆಮಿ ಆಫ್ ಆರ್ಟ್ ಎಂಡ್ ಕಲ್ಚರ್' ಸಂಸ್ಥೆ ಅವರಿಗೆ ಡೊಕ್ಟರ್ ಆಫ್ ಲಿಟರೇಚರ್' ಪ್ರಶಸ್ತಿ ನೀಡಿತು. 'ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ' ’ವರ್ಧಮಾನ’ ಕವನ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ' ೧೯೭೪ರಲ್ಲಿ ರಾಜ್ಯ ಸಾಹಿತ್ಯ ಆಕಾಡೆಮಿ ಪ್ರಶಸ್ತಿ ೧೯೭೯ರಲ್ಲಿ ಕೇರಳದ ಪ್ರತಿಷ್ಠಿತ `ಕುಮಾರ್ ಸಮ್ಮಾನ್' ಪ್ರಶಸ್ತಿ. 'ಮಧ್ಯ ಪ್ರದೇಶ ಸರಕಾರದ "ಕಬೀರ್ ಸಮ್ಮಾನ್" ಡೊಕ್ಟರ್ ಆಫ್ ಲಿಟರೇಚರ್' ಪ್ರಶಸ್ತಿ 'ರಾಜ್ಯೋತ್ಸವ ಪ್ರಶಸ್ತಿ' 'ಪಂಪ ಪ್ರಶಸ್ತಿ'. ಹೀಗೆ ಕನ್ನಡದ ಮಹತ್ವದ ಕವಿಯಾಗಿ ಮೂರು ದಶಕಗಳ ಕಾಲ ಬೆಳಗಿದ ಅಡಿಗರು ೧೯೯೨ ನವೆಂಬರ್ ೧೪ರಂದು ಅಸ್ತಂಗತರಾದರು. ಹೆಚ್ಚಿನ ಓದಿಗೆ ಕೂಪಮಂಡೂಕತ್ವದ ಹೊಸ ಠರಾವು;ಅಕ್ಷರ ಕೆ.ವಿ.;2 Jul, 2017;ಗೋಪಾಲಕೃಷ್ಣ ಅಡಿಗರ ಜನ್ಮಶತಾಬ್ದಿಯ ಈ ಗಳಿಗೆಯಲ್ಲಿ ನನ್ನ ಮನಸ್ಸು ಅವರ ಪ್ರಸಿದ್ಧ ಪದ್ಯ ‘ಕೂಪಮಂಡೂಕ’ವನ್ನು ನೆನಪಿಸಿಕೊಳ್ಳುತ್ತಿದೆ. ಅಡಿಗರ ಕಾವ್ಯಶಕ್ತಿಯ ವಿಕಾಸ ನೋಡಿ ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಗೋಪಾಲಕೃಷ್ಣ ಅಡಿಗ, ಎಂ ಉಲ್ಲೇಖಗಳು ಹೊರಕೊಂಡಿಗಳು ಅಡಿಗ ಅಂಗಳ ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಕರ್ನಾಟಕದ ಪ್ರಸಿದ್ಧ ವ್ಯಕ್ತಿಗಳು ಪಂಪ ಪ್ರಶಸ್ತಿ ಪುರಸ್ಕೃತರು ಕನ್ನಡ ಕವಿಗಳುಕರ್ನಾಟಕ ರಾಜಕಾರಣಿಗಳು
1122
https://kn.wikipedia.org/wiki/%E0%B2%A6%E0%B3%80%E0%B2%AA%E0%B2%BE%E0%B2%B5%E0%B2%B3%E0%B2%BF
ದೀಪಾವಳಿ
ದೀಪಾವಳಿ (ದೀಪಗಳ ಸಾಲು) ದೀಪಗಳಿಂದ ದೀಪಗಳನ್ನು ಹಚ್ಚುವ ಹಬ್ಬ. ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ಭಾರತದಲ್ಲಿ ಸಾಂಪ್ರದಾಯಿಕವಾಗಿ ಪಂಚಾಂಗ ಚಂದ್ರಮಾನವನ್ನು ಅವಲಂಬಿಸಿವೆ. ಅಂದರೆ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ - ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಹಿಂದೂ ಧರ್ಮ ಶ್ರೀ ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ, ಅಮಾವಾಸ್ಯೆಯ ಹಿಂದಿನ ದಿನ (ನರಕ ಚತುರ್ದಶಿ) ಶ್ರೀಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ. ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ ಬಲಿಪಾಡ್ಯಮಿ ದೀಪಾವಳಿಯೊಂದಿಗೆ ಇನ್ನಿತರ ಪುರಾಣಗಳೂ ಸಂಬಂಧಿತವಾಗಿದೆ. ಉದಾಹರಣೆಗೆ, ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರುದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದೆ. ಹಿಂದೂ ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದಿ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿ ತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ ಪಟಾಕಿಗಳಿಗೆ ದೀಪಾವಳಿ ಪ್ರಸಿದ್ಧ. ಉತ್ತರ ಭಾರತದಲ್ಲಿ ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ. ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು. ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು. ಸಿಖ್ ಧರ್ಮ ಸಿಕ್ಖ್ ಧರ್ಮದಲ್ಲಿಯೂ ದೀಪಾವಳಿ ಮುಖ್ಯ ಹಬ್ಬ. ೧೬೨೦ ರಲ್ಲಿ ಸಿಕ್ಖರ ಆರನೆಯ ಗುರು ಹರಗೋಬಿಂದ್ ಸಿಂಗ್ ಗ್ವಾಲಿಯರ್‌ನ ಕೋಟೆಯಲ್ಲಿ ಬಂಧಿತರಾಗಿದ್ದ ೫೨ ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ. ಜೈನ ಧರ್ಮ ಜೈನ ಧರ್ಮದಲ್ಲಿ ದೀಪಾವಳಿಯನ್ನು ಕಾರ್ತಿಕ ಮಾಸದ ೩ ದಿನ ಆಚರಿಸುತ್ತಾರೆ. ದೀಪಾವಳಿಯು ಜೈನ ಧರ್ಮದಲ್ಲಿ ಕಡೆಯ ತೀರ್ಥಂಕರ ಮಹಾವೀರರು ಕಾರ್ತಿಕ ಚತಿರ್ದಶಿಯಂದು (ಕ್ರಿ.ಪೂ ೫೨೭ ಅಕ್ಟೋಬರ್ ೧೫) ಪಾವಾಪುರಿಯಲ್ಲಿ ಮೋಕ್ಷ ಹೊಂದಿದ ದಿನವಾಗಿ ಆಚರಿಸುತ್ತಾರೆ. ಕ್ರಿ.ಪೂ ೩ನೇ ಶತಮಾನದಲ್ಲಿ ಆಚಾರ್ಯ ಭದ್ರಬಾಹುವಿನಿಂದ ರಚಿತವಾದ ಕಲ್ಪಶ್ರುತ ಗ್ರಂಥದಲ್ಲಿರುವಂತೆ ಮಹಾವೀರರ ನಿರ್ವಾಣ ಕಾಲದಲ್ಲಿದ್ದ ದೇವತೆಗಳಿಂದ ಅಂಧಕಾರವು ಮರೆಯಾಗಿದ್ದಿತು. ಆದರೆ ಮುಂದಿನ ರಾತ್ರಿ ಗಾಡಾಂಧಕಾರವು ಆವರಿಸಿತು. ತಮ್ಮ ಗುರುವಿನ ಜ್ಜಾನಜ್ಯೋತಿಯ ಸಂಕೇತವಾಗಿ ೧೬ ಗಣ-ಚಕ್ರವರ್ತಿ, ೯ ಮಲ್ಲ ಮತ್ತು ೯ಗಣರಾಜ್ಯದಲ್ಲಿ ದ್ವಾರವನ್ನು ಬೆಳಗಿದರು. ಜೈನರಿಗೆ ಇದು ವರ್ಷದ ಪ್ರಾರಂಭ. ಮನೆಯ ದ್ವಾರವನ್ನು ದೀಪದಿಂದ ಬೆಳಗುವುದರ ಜೊತೆಗೆ ಈ ಸಮಯದಲ್ಲಿ ಮಹಾವೀರರ ಉಪದೇಶಗಳನ್ನೊಳಗೊಂಡ ಉತ್ತಾರಾಧ್ಯಾಯನ ಸ್ತೋತ್ರದ ಪಠಣೆ ಮಾಡುತ್ತಾರೆ. ಕೆಲವರು ಮಹಾವೀರರ ನಿರ್ವಾಣ ಸ್ಠಳವಾದ ಬಿಹಾರ ರಾಜ್ಯದ ಪಾವಾಪುರಿಗೆ ಯಾತ್ರೆ ಕೈಗೊಳ್ಳುತ್ತಾರೆ. ವ್ಯಾಪಾರಿಗಳು ಹೊಸ ಲೆಕ್ಕದ ಪುಸ್ತಕಗಳನ್ನು ಪ್ರಾರಂಭಿಸುತ್ತಾರೆ. ಚಿತ್ರಗಳು ಉಲ್ಲೇಖಗಳು ಹಬ್ಬಗಳು ಪ್ರಮುಖ ದಿನಗಳು ಹಿಂದೂ ಧರ್ಮದ ಹಬ್ಬಗಳು
1127
https://kn.wikipedia.org/wiki/%E0%B2%8E%E0%B2%B8%E0%B3%8D.%E0%B2%8E%E0%B2%82.%E0%B2%95%E0%B3%83%E0%B2%B7%E0%B3%8D%E0%B2%A3
ಎಸ್.ಎಂ.ಕೃಷ್ಣ
ಎಸ್ ಎಮ್ ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) (ಜನನ-೧೯೩೨) ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. ೧೯೯೯ ರಿಂದ ೨೦೦೪ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ವಿದ್ಯಾಭ್ಯಾಸ ಎಸ್ ಎಂ ಕೃಷ್ಣ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವೀಧರರಾದ ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಓದಿದರು. ಇದರ ನಂತರ ಅಮೆರಿಕದ ಟೆಕ್ಸಸ್ ರಾಜ್ಯದಲ್ಲಿರುವ ಸದರ್ನ್ ಮೆಥಡಿಸ್ಟ್ ವಿಶ್ವವಿದ್ಯಾಲಯದಲ್ಲಿ ಓದಿ ನಂತರ ವಾಷಿಂಗ್ಟನ್ ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ಫುಲ್‍ಬ್ರೈಟ್ ವಿದ್ಯಾರ್ಥಿವೇತನವನ್ನು ಪಡೆದರು. ರಾಜಕೀಯ ಜೀವನ ಭಾರತಕ್ಕೆ ಮರಳಿದ ನಂತರ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ವಿಧಾನ ಸಭೆಗೆ ಮೊದಲ ಬಾರಿ ೧೯೬೨ ರಲ್ಲಿ ಚುನಾಯಿತರಾದರು. ೧೯೬೮ರಲ್ಲಿ ಲೋಕಸಭೆಗೆ ಚುನಾಯಿತರಾದರು. ೧೯೭೧ರಲ್ಲಿ ಅಲ್ಲಿಗೆ ಮರು ಚುನಾಯಿತರಾಗಿ ಮತ್ತೆ ೧೯೭೨ ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾಯಿತರಾದರು. ಇದೇ ಸಮಯದಲ್ಲಿ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. ೧೯೮೩ರಲ್ಲು ಉದ್ಯಮ ಖಾತೆ ಮತ್ತು ೧೯೮೪ ರಲ್ಲಿ ವಿತ್ತ ಖಾತೆಯ ಸಚಿವರಾದರು. ೧೯೮೯ ರಿಂದ ೧೯೯೨ರ ವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. ೧೯೯೨ ರಿಂದ ೧೯೯೪ರ ವರೆಗೆ ಕರ್ನಾಟಕದ ಉಪ-ಮುಖ್ಯಮಂತ್ರಿಗಳಾದರು. ೧೯೯೬ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಕೃಷ್ಣ, ೧೯೯೯ ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ೧೯೯೯ರಿಂದಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದರು. ವಿದೇಶಗಳಲ್ಲಿ ಎರಡು ಬಾರಿ (ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದಾರೆ. ಎಸ್.ಎಂ.ಕೃಷ್ಣ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಜನವರಿ ೨೮ ೨೦೧೭ಬೆಳಿಗ್ಗೆ ೧೧ ಗಂಟೆಗೆ ಎಸ್.ಎಂ.ಕೃಷ್ಣ ಅಧಿಕೃತವಾಗಿ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ‘ ಕಾಂಗ್ರೆಸ್ ಪಕ್ಷವನ್ನು ತ್ಯಜಿಸುತ್ತಿದ್ದೇನೆ’ ಎಂದು ಎಸ್‌. ಎಂ. ಕೃಷ್ಣ ಅಧಿಕೃತವಾಗಿ ಘೋಷಣೆ ಮಾಡಿದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಸ್.ಎಂ.ಕೃಷ್ಣ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ ಎಂದು ಟಿ.ವಿ.ನೈನ್ ವರದಿ ಮಾಡಿದೆ. ಉಲ್ಲೇಖಗಳು ಕರ್ನಾಟಕದ ಮುಖ್ಯಮಂತ್ರಿಗಳು ಕರ್ನಾಟಕದ ರಾಜಕೀಯ ಕರ್ನಾಟಕದ ವಿಧಾನಸಭಾ ಸದಸ್ಯರು ಕರ್ನಾಟಕದ ಲೋಕ ಸಭೆ ಸದಸ್ಯರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ೧೯೩೨ ಜನನಕರ್ನಾಟಕ ರಾಜಕಾರಣಿಗಳು
1131
https://kn.wikipedia.org/wiki/%E0%B2%95%E0%B2%A1%E0%B3%86%E0%B2%82%E0%B2%97%E0%B3%8B%E0%B2%A1%E0%B3%8D%E0%B2%B2%E0%B3%81%20%E0%B2%B6%E0%B2%82%E0%B2%95%E0%B2%B0%E0%B2%AD%E0%B2%9F%E0%B3%8D%E0%B2%9F
ಕಡೆಂಗೋಡ್ಲು ಶಂಕರಭಟ್ಟ
ಆಂಗ್ಲರ ಆಳ್ವಿಕೆಯ ಸಂದರ್ಭ ಕನ್ನಡಕ್ಕೆ ಸಿಕ್ಕುತ್ತಿದ್ದ ಅಷ್ಟಿಷ್ಟು ಗೌರವದ ಜೊತೆಗೆ ಸಾಹಿತ್ಯ ದಿಗ್ಗಜರು ಭಾಷಾ ಪ್ರೇಮ, ಸಾಹಿತ್ಯ ಸಂಸ್ಕೃತಿ ಬಗ್ಗೆ ಆಳವಾದ ಚಿಂತನೆಗೆ ತೊಡಗಿದ್ದರು. ನವೋದಯ ಸಾಹಿತ್ಯದ ಕಾಲಘಟ್ಟದಲ್ಲಿ ಹಲವು ಸಾಹಿತಿಗಳು ಸ್ವಾತಂತ್ರ ಹೋರಾಟದಲ್ಲಿ ನೇರಭಾಗವಹಿಸಿದ್ದರು. ಕಾವ್ಯ, ಕತೆ, ಲೇಖನಗಳ ಮೂಲಕ ಜನಜಾಗೃತಿಗೆ ತೊಡಗಿದರು. ಆದರ್ಶದ ಬೆನ್ನು ಹತ್ತಿ ನಾಡು-ನುಡಿಗೆ ಚಿಂತನೆ ನಡೆಸಿದರು. ಅಂಥವರಲ್ಲಿ ಕವಿ ಕಡೆಂಗೋಡ್ಲು ಶಂಕರಭಟ್ಟರು ಪ್ರಮುಖರು. ಬಾಲ್ಯ, ಶಿಕ್ಷಣ ೧೯೦೪ ಆಗಸ್ಟ ೯ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಟ್ಲ ಸಮೀಪದ ಪೆರುವಾಯಿಯಲ್ಲಿ ಶಂಕರಭಟ್ಟರು ಜನಿಸಿದರು. ತಂದೆ ಕೃಷಿಕರು. ಶಂಕರಭಟ್ಟರ ಬಂಧು, ಹಿರಿಯ ಸಂಶೋಧಕ ಮುಳಿಯ ತಿಮ್ಮಪ್ಪಯ್ಯನವರು ಇವರ ಶಿಕ್ಷಣಕ್ಕೆ ಪ್ರೋತ್ಸಾಹ ಕೊಟ್ಟರು. ಮಂಗಳೂರಿನಲ್ಲಿ ಮುಳಿಯ ಅವರ ಮನೆಯಲ್ಲಿದ್ದುಕೊಂಡು ಓದುತ್ತಲೆ, ಸಾಹಿತ್ಯ ಪರಿಸರದಲ್ಲಿ ಬೆರೆತರು. ಸ್ವಾತಂತ್ರ್ಯ ಹೋರಾಟ ೧೯೨೦ರಲ್ಲಿಗಾಂಧೀಜಿಯವರು ಮಂಗಳೂರಿಗೆ ಬಂದು ಸಾರ್ವಜನಿಕ ಸಭೆ ಉದ್ದೇಶಿಸಿ ಸ್ವಾತಂತ್ರ ಸಂಗ್ರಾಮಕ್ಕೆ ಭಾಗವಹಿಸಲು ಕರೆಕೊಟ್ಟರು. ಶಂಕರಭಟ್ಟರು ವಿದ್ಯಾಭ್ಯಾಸ ಕುಂಠಿತಗೊಳಿಸಿ ಗಾಂಧೀಜಿಯವರುನೀಡಿದ ಕರೆಗೆ ಓಗೊಟ್ಟು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು. ಹೋರಾಟದ ಸಂದರ್ಭದಲ್ಲೇ ಪ್ರೌಢಶಿಕ್ಷಣ ಸಹಾ ಮುಗಿಸಿದರು. ನಂತರ ಧಾರವಾಡದ ಶಿಕ್ಷಣ ಸಮಿತಿಯ `ಸ್ನಾತಕ' ಪರೀಕ್ಷೆಯಲ್ಲಿ ಉಚ್ಚ ಶ್ರೇಣಿಯಲ್ಲಿ ತೇರ್ಗಡೆಯಾದರು. ರಾಷ್ಟ್ರೀಯ ಚಳವಳಿಯಲ್ಲಿ ಭಾಗವಹಿಸಲು ವಿದ್ಯಾಭ್ಯಾಸವನ್ನು ತ್ಯಜಿಸಿದವರಿಗಾಗಿ ಕಾರ್ನಾಡ ಸದಾಶಿವರಾಯರು ಮಂಗಳೂರಿನಲ್ಲಿ ಸ್ಥಾಪಿಸಿದ್ದ ತಿಲಕ ವಿದ್ಯಾಲಯವೆಂಬ ರಾಷ್ಟ್ರೀಯ ಪಾಠಶಾಲೆಯಲ್ಲಿ ಶಂಕರಭಟ್ಟರು ಕೆಲಕಾಲ ಅಧ್ಯಾಪಕರಾದರು. ವೃತ್ತಿ ಜೀವನ ಆಬಳಿಕ ಪಂಜೆ ಮಂಗೇಶರಾಯರಪ್ರೋತ್ಸಾಹದಿಂದ ೧೯೨೯ರಿಂದ ೧೯೬೪ರ ವರೆಗೆ (೩೫ ವರ್ಷಗಳ ದೀರ್ಘಕಾಲ) ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಸಾವಿರಾರು ವಿದ್ಯಾರ್ಥಿಗಳಿಗೆ ಕನ್ನಡದ ಒಲವು ಮೂಡಿಸಲು ಶ್ರಮಿಸಿದರು. ಪತ್ರಕರ್ತ ಅಧ್ಯಾಪಕರಾಗುವ ಮೊದಲು ಪತ್ರಿಕೋದ್ಯಮದ ಅನುಭವ ಪಡೆದರು. "ನವಯುಗ"ದಲ್ಲಿ ಪತ್ರಕರ್ತರಾಗಿ ಸೇರಿಕೊಂಡು, ೧೯೨೮ರಲ್ಲಿ "ರಾಷ್ಟ್ರಬಂಧು" ಪತ್ರಿಕೆಯ ಸಂಪಾದಕರಾದರು. ಅಲ್ಲಿಂದ ಅಧ್ಯಾಪಕ ವೃತ್ತಿ ಹಾಗೂ ಪತ್ರಿಕೋದ್ಯಮ ಎರಡರಲ್ಲೂ ಸೇವೆ ಸಲ್ಲಿಸಿದರು. ಗೌರವ ೧೯೬೪ರಲ್ಲಿ ಕನ್ನಡ ಅಧ್ಯಾಪಕ ವೃತ್ತಿಯಿಂದ ನಿವೃತ್ತಿ ಹೊಂದಿದ ಮರುವರ್ಷ,ಕಡೆಂಗೋಡ್ಲು ಶಂಕರಭಟ್ಟರು ಕಾರವಾರದಲ್ಲಿ ನಡೆದ ೪೫ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗುವ ಗೌರವ ಪಡೆದರು. ೧೯೬೮ರ ಮೇ ೧೭ರಂದು ತಮ್ಮ ಮನೆ ಕಡೆಂಗೋಡ್ಲುವಿನಿಂದ ಮಂಗಳೂರಿಗೆ ಪ್ರಯಾಣ ಹೊರಟಿದ್ದ ಶಂಕರಭಟ್ಟರು, ಬಸ್ಸು ಸುಮಾರು ಒಂದೆರೆಡು ಕಿ. ಮೀ. ದೂರ ಕ್ರಮಿಸಿದಾಗ ಹೃದಯಸ್ತಂಭನವಾಗಿ ಬಸ್ಸಿನಲ್ಲಿಯೇ ನಿಧನರಾದರು. ಅರವತ್ತ ನಾಲ್ಕು ವರ್ಷದ ಶಂಕರಭಟ್ಟರ ಬಹುಮುಖ ಸಾಧನೆಯ ಬದುಕು ಕೊನೆಗೊಂಡಿತು. ಉಡುಪಿಯ ಮಹಾತ್ಮಾ ಗಾಂಧಿ ಮೆಮೋರಿಯಲ್ ಕಾಲೇಜು (ಎಂಜಿಎಂ), ಗೋವಿಂದ ಪೈ ಸ್ಮಾರಕ ಸಂಶೋಧನಾಕೇಂದ್ರದಿಂದ ಪ್ರತಿವರ್ಷ ಹಸ್ತಪ್ರತಿಯ ಕಾವ್ಯಕ್ಕೆ "ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ" ಕೊಡುತ್ತಾ ಬಂದಿದೆ. ಕಡೆಂಗೋಡ್ಲು ಅವರ ಅಧ್ಯಾಪಕ ವೃತ್ತಿ, ಪತ್ರಿಕಾ ವೃತ್ತಿ, ಸಾಹಿತ್ಯ ಸೇವೆ, ಸ್ವಾತಂತ್ರ ಹೋರಾಟಗಳೆಲ್ಲವನ್ನೂ ಇಂಥ ಪ್ರಶಸ್ತಿ ಕೊಡುವ ಮೂಲಕ ನೆನಪಿಸುತ್ತಿರುವುದು ನಿಜಕ್ಕೂ ಅಭಿನಂದನೀಯ. ಸಾಹಿತ್ಯ ಕವನ ಸಂಕಲನ ಕಾಣಿಕೆ ಘೋಷಯಾತ್ರೆ (೧೯೨೦) ಹಣ್ಣುಕಾಯಿ ಗಾಂಧಿ ಸಂದೇಶ (೧೯೨೦) ವಸ್ತ್ರಾಪಹರಣ (೧೯೨೧) ನಲ್ಮೆ (೧೯೩೨) ಪತ್ರಪುಷ್ಪ (೧೯೬೫) ಕಥಾಸಂಕಲನ ಗಾಜಿನ ಬಳೆ ದುಡಿಯುವ ಮಕ್ಕಳು ನಾಟಕ ಮಹಾಯೋಗಿ ಗುರುದಕ್ಷಿಣೆ ಅಜಾತಶತ್ರು ಹಿಡಿಂಬೆ ಕಾದಂಬರಿ ಧೂಮಕೇತು (೧೯೩೫) ದೇವತಾ ಮನುಷ್ಯ (೧೯೪೭) ಲೋಕದ ಕಣ್ಣು (೧೯೪೮) ವಿಮರ್ಶೆ ವಾಙ್ಮಯ ತಪಸ್ಸು (೧೯೬೩) ಅಭಿನಂದನ ಗ್ರಂಥ ೧. ಸಾಹಿತ್ಯ ಯೋಗಿ. ಉಲ್ಲೇಖಗಳು ಕನ್ನಡ ಸಾಹಿತ್ಯ ಕಡೆಂಗೋಡ್ಲು ಶಂಕರಭಟ್ಟ ಕಡೆಂಗೋಡ್ಲು ಶಂಕರಭಟ್ಟ
1133
https://kn.wikipedia.org/wiki/%E0%B2%8E%E0%B2%B8%E0%B3%8D.%E0%B2%8E%E0%B2%B2%E0%B3%8D.%20%E0%B2%AD%E0%B3%88%E0%B2%B0%E0%B2%AA%E0%B3%8D%E0%B2%AA
ಎಸ್.ಎಲ್. ಭೈರಪ್ಪ
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಜೀವನ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ೨೬-೦೭-೧೯೩೪ ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಬೇಜವಾಬ್ದಾರಿ ತಂದೆ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಅವರ ಸಣ್ಣ ವಯಸ್ಸಿನಲ್ಲೇ ಅವರ ತಾಯಿಯ ಧೀಮಂತಿಕೆಯನ್ನು ಮೈಗೂಡಿಸಿ ಕೊಂಡರು. ಶಾಲಾ ದಾಖಲೆಗಳ ಪ್ರಕಾರ ಅವರ ಜನ್ಮದಿನ ೨೦-೦೮-೧೯೩೧ ಎಂದು ಅವರು ತಮ್ಮ ಆತ್ಮಕಥೆ ಭಿತ್ತಿಯಲ್ಲಿ ಹೇಳಿಕೊಂಡಿದ್ದಾರೆ. (ಪುತ ೫೦ ಮೊದಲ ಮುದ್ರಣ). ಅವರ ೫ನೇ ವಯಸ್ಸಿನಲ್ಲಿ ಅವರ ತಾಯಿ ಬಡತನ - ಪ್ಲೇಗ್ ಗಳಿಗೆ ಜೀವವನ್ನು ತೆತ್ತಾಗ ಬದುಕಿನ ವಿಶ್ವ ವಿಶಾಲತೆಯ ರಂಗದಲ್ಲಿ ಸಾಹಸಮಯವಾದ ಬದುಕನ್ನು ತಾವೇ ನಿರ್ಮಿಸಿ ಕೊಳ್ಳ ತೊಡಗಿ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರು. ಗಾಂಧೀಜಿಯವರ ಮೌಲ್ಯಗಳಿಗೆ ಬೆಲೆ ಕೊಟ್ಟು ಸ್ವಾತಂತ್ರ ಚಳುವಳಿಗೆ ತೊಡಗಿಸಿಕೊಂಡಾಗ ಅವರಿಗೆ ಕೇವಲ ೧೩ ವರ್ಷ! ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ "ಸತ್ಯ ಮತ್ತು ಸೌಂದರ್ಯ", ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದರು. ಹುಬ್ಬಳ್ಳಿ, ಗುಜರಾತಿನ ಸರದಾರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಶಾಸ್ತ್ರಿಯ ಶಿಸ್ತಿನ ಓದಿನ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದ್ದಾರೆ. ೧೯೬೧ ರಲ್ಲಿ `ಧರ್ಮಶ್ರೀ' ಕಾದಂಬರಿ ಪ್ರಕಟಿಸಿ ಇದುವರೆವಿಗೆ ನಾಲ್ಕು ದಶಕಗಳಲ್ಲಿ ೨೧ ಕಾದಂಬರಿಗಳನ್ನು ಬರೆದಿದ್ದಾರೆ. ಆಯಾ ಕಾಲದಲ್ಲಿ ಬಂದ ಅವರ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದ ಗೊಂಡಿವೆ. ಗೃಹಭಂಗ ,ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ ೧೯೬೬ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೭೫ ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. `ಪರ್ವ' ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ. ಲೈಂಗಿಕತೆ ಮತ್ತು ಸಾವುಗಳ ನೆಲೆಯಲ್ಲಿ ದ್ರೌಪದಿ, ಕುಂತಿ, ಮಾದ್ರಿ, ಗಾಂಧಾರಿ ಪಾತ್ರಗಳನ್ನು ವಿಶಿಷ್ಟವಾಗಿ ಮೂಡಿಸಿದ್ದಾರೆ. ಕಾದಂಬರಿಗಳಲ್ಲದೆ ಸಾಹಿತ್ಯ ಮೀಮಾಂಸೆಗೆ ಸಂಬಂಧಿಸಿದ `ಸಾಹಿತ್ಯ ಮತ್ತು ಪ್ರತೀಕ', `ಕಥೆ ಮತ್ತು ಕಥಾವಸ್ತು', `ನಾನೇಕೆ ಬರೆಯುತ್ತೇನೆ' ಎಂಬ ಕೃತಿಗಳನ್ನೂ ಭೈರಪ್ಪ ರಚಿಸಿದ್ದಾರೆ. ಪ್ರಸ್ತುತ ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿದ್ದಾರೆ. ೧೯೯೯ರಲ್ಲಿ ಕನಕಪುರಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಭೈರಪ್ಪ ಆಯ್ಕೆಯಾಗಿದ್ದರು. (ಹೆಚ್ಚಿನ ಓದು : ಭೈರಪ್ಪನವರ ಬಾಲ್ಯ ಕಾಲದ ಹೃದಯಸ್ಪರ್ಶಿ ಚಿತ್ರಣಕ್ಕಾಗಿ ಬೆಳಗೆರೆ ಕೃಷ್ಣಶಾಸ್ತ್ರಿಗಳ "ಮರೆಯಲಾದೀತೇ" ವ್ಯಕ್ತಿ ಚಿತ್ರ ಸಂಗ್ರಹದಲ್ಲಿ ಭೈರಪ್ಪನವರ ಬಗೆಗಿನ ಅಧ್ಯಾಯವನ್ನು ಓದಿ. ಭೈರಪ್ಪನವರ ಜೀವನದ ಹೆಚ್ಚಿನ ಮಾಹಿತಿಗಾಗಿ ಅವರ ಆತ್ಮಚರಿತ್ರೆ ಭಿತ್ತಿಯನ್ನೂ ಓದಬಹುದಾಗಿದೆ.) ಕೃತಿಗಳು ಕಾದಂಬರಿಗಳು ಭೀಮಕಾಯ ಬೆಳಕು ಮೂಡಿತು ಧರ್ಮಶ್ರೀ - (೧೯೬೧) ದೂರ ಸರಿದರು- (೧೯೬೨) ಮತದಾನ - (೧೯೬೫) ವಂಶವೃಕ್ಷ- (೧೯೬೫) ಜಲಪಾತ (ಕಾದಂಬರಿ)- (೧೯೬೭) ನಾಯಿ ನೆರಳು- (೧೯೬೮) ತಬ್ಬಲಿಯು ನೀನಾದೆ ಮಗನೆ-(೧೯೬೮) ಗೃಹಭಂಗ-(೧೯೭೦) ನಿರಾಕರಣ-(೧೯೭೧) ಗ್ರಹಣ-(೧೯೭೨) ದಾಟು -(೧೯೭೩) ಅನ್ವೇಷಣ-(೧೯೭೬) ಪರ್ವ-(೧೯೭೯) ನೆಲೆ -(೧೯೮೩) ಸಾಕ್ಷಿ -(೧೯೮೬) ಅಂಚು-(೧೯೯೦) ತಂತು -(೧೯೯೩) ಸಾರ್ಥ-(೧೯೯೮) ಮಂದ್ರ-(೨೦೦೧) ಆವರಣ-(೨೦೦೭) ಕವಲು - (೨೦೧೦) ಯಾನ - (೨೦೧೪) ಉತ್ತರಕಾಂಡ-(೨೦೧೭) ಆತ್ಮ ಚರಿತ್ರೆ ಭಿತ್ತಿ ತತ್ತ್ವಶಾಸ್ತ್ರ ಸತ್ಯ ಮತ್ತು ಸೌಂದರ್ಯ (೧೯೬೬) - ಪಿ.ಎಚ್.ಡಿ ಪ್ರಬಂಧ ಸಾಹಿತ್ಯ ಮತ್ತು ಪ್ರತೀಕ (೧೯೬೭) ಕಥೆ ಮತ್ತು ಕಥಾವಸ್ತು (೧೯೬೯) ಸಂದರ್ಭ:ಸಂವಾದ (೨೦೧೧) ಇತರೆ ನಾನೇಕೆ ಬರೆಯುತ್ತೇನೆ? (೧೯೮೦) ಇತರ ಭಾಷೆಗಳಿಗೆ ಅನುವಾದವಾಗಿರುವ ಕಾದಂಬರಿಗಳು ಧರ್ಮಶ್ರೀ - ಸಂಸ್ಕೃತ, ಮರಾಠಿ ವಂಶವೃಕ್ಷ - ತೆಲುಗು, ಮರಾಠಿ, ಹಿಂದಿ, ಉರ್ದು, ಇಂಗ್ಲೀಷ್ ನಾಯಿ ನೆರಳು - ಗುಜರಾತಿ, ಹಿಂದಿ ತಬ್ಬಲಿಯು ನೀನಾದೆ ಮಗನೆ - ಹಿಂದಿ ಗೃಹಭಂಗ - ಭಾರತದ ಹದಿನಾಲ್ಕು ಭಾಷೆಗಳಿಗೆ ಅನುವಾದವಾಗಿದೆ ನಿರಾಕರಣ -ಹಿಂದಿ ದಾಟು - ಇಂಗ್ಲೀಷ್, ಭಾರತದ ಹದಿನಾಲ್ಕು ಭಾಷೆಗಳಿಗೆ ಅನುವಾದವಾಗಿದೆ ಅನ್ವೇಷಣ -ಹಿಂದಿ,ಮರಾಠಿ ಪರ್ವ -ಹಿಂದಿ, ಮರಾಠಿ, ಇಂಗ್ಲೀಷ್, ತೆಲುಗು, ಬೆಂಗಾಲಿ, ತಮಿಳು ನೆಲೆ -ಹಿಂದಿ ಸಾಕ್ಷಿ - ಹಿಂದಿ, ಇಂಗ್ಲೀಷ್ ಅಂಚು -ಹಿಂದಿ, ಮರಾಠಿ ತಂತು -ಹಿಂದಿ, ಮರಾಠಿ ಸಾರ್ಥ -ಹಿಂದಿ, ಮರಾಠಿ, ಇಂಗ್ಲೀಷ್, ಸಂಸ್ಕೃತ ನಾನೇಕೆ ಬರೆಯುತ್ತೇನೆ -ಮರಾಠಿ ಸತ್ಯ ಮತ್ತು ಸೌಂದರ್ಯ -ಇಂಗ್ಲೀಷ್ ಭಿತ್ತಿ -ಹಿಂದಿ, ಮರಾಠಿ ಚಲನಚಿತ್ರವಾಗಿರುವ ಕಾದಂಬರಿಗಳು ವಂಶವೃಕ್ಷ - ೧೯೭೨ ತಬ್ಬಲಿಯು ನೀನಾದೆ ಮಗನೆ - ೧೯೭೭ ಮತದಾನ - ೨೦೦೧ ನಾಯಿ ನೆರಳು - ೨೦೦೬ ಟಿ.ವಿ. ಧಾರಾವಾಹಿಯಾಗಿರುವ ಕಾದಂಬರಿಗಳು ಗೃಹಭಂಗ ದಾಟು (ಹಿಂದಿ) ಪ್ರಶಸ್ತಿ/ಗೌರವಗಳು ೨೦೨೩ ರಲ್ಲಿ ಪದ್ಮಭೂಷಣ ಪ್ರಶಸ್ತಿ. ‌ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ವಂಶವೃಕ್ಷ ಕಾದಂಬರಿಗೆ) -೧೯೬೬ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ದಾಟು ಕಾದಂಬರಿಗೆ)- ೧೯೭೫ ಪಂಪ ಪ್ರಶಸ್ತಿ - ೨೦೦೫ ಎನ್ ಟಿ ಆರ್‍ ರಾಷ್ಟ್ರೀಯ ಪ್ರಶಸ್ತಿ- ೨೦೦೭ ಗುಲಬರ್ಗಾ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟು- ೨೦೦೭ ಸರಸ್ವತಿ ಸಮ್ಮಾನ್ ಪ್ರಶಸ್ತಿ (ಮಂದ್ರ ಕಾದಂಬರಿಗೆ)- ೨೦೧೦ ನಾಡೋಜ ಪ್ರಶಸ್ತಿ - ೨೦೧೧ ವಾಗ್ವಿಲಾಸಿನಿ ಪುರಸ್ಕಾರ್ (ದೀನನಾಥ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ)- ೨೦೧೨ (ಗಾನಕೋಗಿಲೆ ಭಾರತರತ್ನ ಲತಾ ಮಂಗೇಶ್ಕರ್ ಅವರು ತಮ್ಮ ತಂದೆ ದೀನನಾಥ ಮಂಗೇಶ್ಕರ್ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಸ್ಮೃತಿ ಪ್ರತಿಷ್ಠಾನ ಈ ಪುರಸ್ಕಾರ ನೀಡುತ್ತಿತ್ತು. ಇದುವರೆಗೂ 20 ಲೇಖಕರಿಗೆ ಈ ಪುರಸ್ಕಾರ ನೀಡಲಾಗಿದ್ದು ಅವರಲ್ಲಿ 18 ಮರಾಠಿ ಲೇಖಕರು ಹಾಗೂ ಇಬ್ಬರು ಸಿನಿಮಾ ಸಾಹಿತ್ಯ ಕ್ಷೇತ್ರದ ಜಾವೆದ್ ಅಖ್ತರ್ ಮತ್ತು ಮಜರೂರ ಸುಲ್ತಾನಪುರಿ ಸೇರಿದ್ದಾರೆ. ಮಹಾರಾಷ್ಟ್ರದಾಚೆಗಿನ ಲೇಖಕರೊಬ್ಬರಿಗೆ ನೀಡುತ್ತಿರುವ ಮೊದಲ ಸಂದರ್ಭ ಇದಾಗಿದೆ) ಡಾ.ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ - ೨೦೧೪ ರಾಷ್ಟ್ರೀಯ ಪ್ರಾಧ್ಯಾಪಕ (ನ್ಯಾಷನಲ್ ಪ್ರೊಫೆಸರ್) ಭೈರಪ್ಪಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ, ಕಾದಂಬರಿಕಾರ ಪೊ.ಎಸ್‌.ಎಲ್‌.ಭೈರಪ್ಪ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಉದಯವಾಣಿ, ೧೮ಏಪ್ರಿಲ್೨೦೧೫ S.L.Bhairappa was cheated of Higher Padma Award, in preference. To Shri. Ravishankar, Star of Mysore, July,19,2017 'ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ', 'ಪದ್ಮಶ್ರೀ ಪುರಸ್ಕೃತ ಡಾ.ಎಸ್.ಎಲ್.ಭೈರಪ್ಪನವರಿಗೆ ಮತ್ತೊಂದು ಗೌರವ, ಕನ್ನಡಪ್ರಭ,೨೫, ಸೆಪ್ಟೆಂಬರ್, ೨೦೨೦ ಭೈರಪ್ಪಗೆ ಸಹೃದಯ ಓದುಗರ ಸನ್ಮಾನಗಳು ನಮ್ಮ ಭೈರಪ್ಪನವರು-ಓದುಗರ ಮನದಾಳದ ಮಾತುಗಳು ಚಿತ್ರಸಂಪುಟ ಉಲ್ಲೇಖಗಳು ಬಾಹ್ಯ ಸಂಪರ್ಕಗಳು ಎಸ್ ಎಲ್ ಭೈರಪ್ಪನವರ ಅಧಿಕೃತ ಅಂತರ್ಜಾಲ ತಾಣ Dr. S.L.Bhyrappa on distorting Indian history, Preksha A journal of culture and philosophy ಎಸ್.ಎಲ್.ಭೈರಪ್ಪ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಪಂಪ ಪ್ರಶಸ್ತಿ ಪುರಸ್ಕೃತರು ನಾಡೋಜ ಪ್ರಶಸ್ತಿ ಪುರಸ್ಕೃತರು ಲೇಖಕರು ಮೈಸೂರಿನ ಬರಹಗಾರರು
1144
https://kn.wikipedia.org/wiki/%E0%B2%AA%E0%B3%81%E0%B2%B0%E0%B2%82%E0%B2%A6%E0%B2%B0%E0%B2%A6%E0%B2%BE%E0%B2%B8
ಪುರಂದರದಾಸ
ಜೀವನ ಇವರ ಮೊದಲ ಹೆಸರು ಶ್ರೀನಿವಾಸ ನಾಯಕ, ತಂದೆ ವರದಪ್ಪನಾಯಕ, ತಾಯಿ ರುಕ್ಮಿಣಿ. ಪುರಂದರದಾಸರ ತಂದೆ ವರದಪ್ಪ ನಾಯಕ ಲೇವಾದೇವಿ ವೃತ್ತಿಯಲ್ಲಿದ್ದವರು. ಅನೇಕ ವರ್ಷಗಳ ಕಾಲ ಮಕ್ಕಳಾಗದ ಕಾರಣ ತಿರುಪತಿ ಶ್ರೀನಿವಾಸನಿಗೆ ಪ್ರಾರ್ಥನೆ ಸಲ್ಲಿಸಿದ ಮೇಲೆ ಮಗುವಾಯಿತು ಎಂಬ ನಂಬಿಕೆಯಿದೆ. ಇವರು ನಾಯಕ ಜನಾಂಗದವರಿಂದಲೇ ಅವರು ಮಗನಿಗೆ ಶ್ರೀನಿವಾಸ ನಾಯಕ ಎಂದು ಹೆಸರಿಟ್ಟರಂತೆ. ಜನ್ಮ ಸ್ಥಳ ಆರಗ, ತೀರ್ಥಹಳ್ಳಿ ತಾ|| ಶಿವಮೊಗ್ಗ ಜಿ|| ಈ ಮೊದಲು ಮಹಾರಾಷ್ಟ್ರದ ಪುರಂದರಗಢವು ಪುರಂದರದಾಸರ ಜನ್ಮ ಸ್ಥಳವೆಂದು ನಂಬಲಾಗಿತ್ತು. ಆದರೆ ಕರ್ನಾಟಕ ಸರ್ಕಾರವು ಹಿರಿಯ ಸಂಗೀತಗಾರ ಆರ್.ಕೆ. ಪದ್ಮನಾಭ, ಕರ್ನಾಟಕ ಸರ್ಕಾರದ ಮಾಜಿ ಮಂತ್ರಿ ಲೀಲಾದೇವಿ ಆರ್. ಪ್ರಸಾದ್, ಹಿರಿಯ ವಿದ್ವಾಂಸರಾದ ಎ.ವಿ. ನಾವಡ, ವೀರಣ್ಣ ರಾಜೂರ ಮತ್ತು ಅರಳುಮಲ್ಲಿಗೆ ಪಾರ್ಥಸಾರಥಿ ಅವರನ್ನು ಒಳಗೊಂಡ ತಂಡ ರಚಿಸಿ ಪುರಂದರದಾಸರ ಜನ್ಮಸ್ಥಳದ ಬಗ್ಗೆ ವರದಿ ನೀಡುವಂತೆ ಕೋರಿತ್ತು. ಈ ತಂಡಕ್ಕೆ ಶಿವಾನಂದ ವಿರಕ್ತಮಠರವರು ಸಂಚಾಲಕರಾಗಿದ್ದರು. ಈ ತಜ್ಞರ ವರದಿಯ ಪ್ರಕಾರ ಪುರಂದರಗಢವು ಪುರಂದರ ಎಂಬ ಹೆಸರನ್ನು ಊರಿನ ಹೆಸರಿನಲ್ಲಿ ಮಾತ್ರ ಹೊಂದಿದ್ದು ಪುರಂದರ ದಾಸರ ಕುರಿತು ಯಾವುದೇ ಐತಿಹಾಸಿಕ-ಸಾಂಸ್ಕೃತಿಕ ದಾಖಲೆ ಹೊಂದಿಲ್ಲ. ತೀರ್ಥಹಳ್ಳಿ ತಾಲೂಕಿನ ಆರಗ ಊರು ಪುರಂದರ ದಾಸರ ಕುರಿತು ಹಲವು ಐತಿಹಾಸಿಕ ಸಾಕ್ಷ್ಯಗಳನ್ನು ಹೊಂದಿದ್ದು ಆರಗವೇ ಪುರಂದರ ದಾಸರ ಜನ್ಮಸ್ಥಳವೆಂದು ಕರ್ನಾಟಕ ಸರ್ಕಾರಕ್ಕೆ ೨೦೧೮ರಲ್ಲಿ ವರದಿ ಸಲ್ಲಿಸಿದೆ. ವೈರಾಗ್ಯ ಶ್ರೀನಿವಾಸ ನಾಯಕ ಬೆಳೆದ ನಂತರ ತಂದೆಯ ವೃತ್ತಿಯನ್ನೇ ಮುಂದುವರಿಸಿದ. ಆದರೆ ಅತ್ಯಂತ ಜಿಪುಣನೆಂದು ಹೆಸರಾದ ಶ್ರೀನಿವಾಸ, ತಂದೆ ಅಸ್ವಸ್ಥರಾದಾಗಲೂ ಹಣ ಖರ್ಚು ಮಾಡಲು ತಡೆದನಂತೆ. ಶ್ರೀನಿವಾಸನ ಪತ್ನಿ ಸರಸ್ವತಿ ದಾನಶೀಲೆಯಾಗಿ, ಪತಿಯ ಕೋಪ ಅವಳ ಮೇಲೆ ಬೀಳುತ್ತಿತ್ತು ಎಂದು ಹೇಳುತ್ತಾರೆ. ಅವರ ಸಂಸಾರ ಮೂಲತಃ ಪಂಡರಾಪುರ/ ಪಂಡರಾಪುರದಲ್ಲಿದ್ದರೂ ಶ್ರೀನಿವಾಸ ನಂತರದ ವರ್ಷಗಳಲ್ಲಿ ಹಂಪೆಯಲ್ಲಿದ್ದನೆಂದು ತೋರುತ್ತದೆ. ಐತಿಹ್ಯ ವಿಠ್ಠಲ (ವಿಷ್ಣು) ಬಡ ಬ್ರಾಹ್ಮಣನ ವೇಷದಲ್ಲಿ ಒಮ್ಮೆ ಶ್ರೀನಿವಾಸನ ಅಂಗಡಿಗೆ ಬಂದು ಮಗನ ಉಪನಯನಕ್ಕೆ ಹಣ ಬೇಡಿದನಂತೆ. ಜಿಪುಣ ಶ್ರೀನಿವಾಸ ಪ್ರತಿ ದಿನವೂ ಮಾರನೆಯ ದಿನ ಬರಹೇಳುತ್ತ, ಆರು ತಿಂಗಳುಗಳ ಕಾಲ ಮುಂದೆ ಹಾಕಿದನಂತೆ. ಕೊನೆಗೆ ಬ್ರಾಹ್ಮಣನ ಕಾಟ ತಡೆಯಲಾರದೆ ಒಂದು ಸವಕಲು ನಾಣ್ಯವನ್ನು ಕೊಟ್ಟನಂತೆ. ವಿಠ್ಠಲ ಈಗ ಶ್ರೀನಿವಾಸನ ಮನೆಗೆ ತೆರಳಿ ಆರು ತಿಂಗಳುಗಳ ಕಾಲ ಒಬ್ಬ ವರ್ತಕ ತನ್ನನ್ನು ಸತಾಯಿಸಿ ಕೊನೆಗೆ ಸವಕಲು ನಾಣ್ಯ ಕೊಟ್ಟ ಕಥೆ ಹೇಳಿದನಂತೆ. ಮಾರನೇ ದಿನ ಅದೇ ಬ್ರಾಹ್ಮಣ ಮನೆಗೆ ಬಂದು ಸರಸ್ವತಿಯ ಬಳಿ ತನ್ನ ಮಗನ ಉಪನಯನದ ಬಗ್ಗೆ ಹೇಳಿ ಅವಳಿಂದ ಸಹಾಯ ಯಾಚಿಸುತ್ತಾನೆ. ಸರಸ್ವತಿ ಮರುಕದಿಂದ ತನ್ನ ಬಳಿ ಯವುದೇ ಧನ ಆಭರಣಗಳಿಲ್ಲ ಎಲ್ಲವೂ ತನ್ನ ಗಂಡನ ಬಳಿ ಇದೆ. ಅವರ ಅನುಮತಿ ಇಲ್ಲದೇ ಏನನ್ನೂ ಕೊಡುವ ಪರಿಸ್ಥಿತಿಯಲ್ಲಿಲ್ಲ ಎಂದು ಬೇಸರ ಪಡುತ್ತಾಳೆ. ಆಗ ಆ ಬ್ರಾಹ್ಮಣ ನಿನ್ನ ತವರಿನಲ್ಲಿ ನಿನಗೆ ಕೊಟ್ಟ ಮೂಗುತಿಯ ಮೇಲೆ ನಿನ್ನ ಅಧಿಕಾರವಿದೆ. ಅದನ್ನೇ ಕೊಡು ಎಂದಾಗ, ಅವನಿಗೆ ತನ್ನ ಮೂಗುತಿಯನ್ನು ತೆಗೆದು ಕೊಟ್ಟಳಂತೆ. ಬ್ರಾಹ್ಮಣ ತಕ್ಷಣ ಮೂಗುತಿಯನ್ನು ಶ್ರೀನಿವಾಸನ ಅಂಗಡಿಗೆ ಒಯ್ದು ಅದನ್ನು ಅಡವಿಡಲು ಪ್ರಯತ್ನಿಸಿದನಂತೆ. ಶ್ರೀನಿವಾಸ ಆ ಮೂಗುತಿಯನ್ನು ಗುರುತಿಸಿ, ಹಣಕ್ಕೆ ನಾಳೆ ಬರುವಂತೆ ಬ್ರಾಹ್ಮಣನಿಗೆ ಹೇಳಿ, ಅದನ್ನು ಡಬ್ಬಿಯಲ್ಲಿಟ್ಟು ತಕ್ಷಣ ಮನೆಗೆ ಬಂದು ಪತ್ನಿಯ ಬಳಿ ಮೂಗುತಿಯನ್ನು ತೋರಿಸಲು ಹೇಳಿದನಂತೆ. ಹೆದರಿದ ಹೆಂಡತಿ ಸ್ನಾನ ಮಾಡುವಾಗ ತೆಗೆದಿಟ್ಟಿದ್ದೆ, ತರುತ್ತೇನೆಂದು ಒಳಗೆ ಹೋಗಿ, ಸ್ನಾನ ಕೊಠಡಿಯಲ್ಲಿ ವಿಷ ಕುಡಿಯುವ ಪ್ರಯತ್ನ ನಡೆಸಿದಾಗ ಅವಳ ವಿಷದ ಬಟ್ಟಲಿನೊಳಕ್ಕೆ ಮೇಲಿನಿಂದ ಮೂಗುತಿ ಬಿದ್ದಿತಂತೆ. ಅದನ್ನು ತಂದು ಶ್ರೀನಿವಾಸನಿಗೆ ಕೊಡುತ್ತಾಳೆ. ಅಂಗಡಿಗೆ ಹಿಂದಿರುಗಿ ಬಂದ ಶ್ರೀನಿವಾಸ ಡಬ್ಬಿಯನ್ನು ತೆಗೆದು ನೋಡಿದರೆ ಅಲ್ಲಿ ಇಟ್ಟಿದ್ದ ಮೂಗುತಿ ಮಾಯವಾಗಿತ್ತಂತೆ. ಆಗ ಅವನಿಗೆ ಬಂದ ಬ್ರಾಹ್ಮಣ ಬೇರೆ ಯಾರೂ ಅಲ್ಲ, ತನ್ನನ್ನು ಪರೀಕ್ಷಿಸಲು ಸ್ವತಃ ನಾರಾಯಣನೇ ಬ್ರಾಹ್ಮಣ ವೇಷದಲ್ಲಿ ಬಂದಿದ್ದನೆಂದು ಅರಿತು, ತನ್ನ ಬಗ್ಗೆ ತಾನೇ ನಾಚಿಕೆ ಪಟ್ಟುಕೊಂಡ ಶ್ರೀನಿವಾಸ, ತನ್ನ ಶ್ರೀಮಂತಿಕೆಯನ್ನು ತೊರೆದು ಹರಿದಾಸನಾಗುವ ನಿರ್ಧಾರ ತೆಗೆದುಕೊಂಡನಂತೆ. ದೇವರು ದಾರಿ ತೋರಿಸಿದ್ದರ ಬಗ್ಗೆ ಕೃತಜ್ಞತೆಗಾಗಿ ತಮ್ಮ ಹೆಂಡತಿಯ ಜ್ಞಾಪಕಾರ್ಥ ಒಂದು ಕೀರ್ತನೆಯನ್ನೂ ಪುರಂದರದಾಸರು ರಚಿಸಿದ್ದಾರೆ. ನಂತರ ಶ್ರೀನಿವಾಸ ನಾಯಕ 'ಪುರಂದರದಾಸ' ಎಂಬ ಹೆಸರನ್ನು ಪಡೆದರು. ತಮ್ಮ ಹೆಂಡತಿಯ ಜ್ಞಾಪಕಾರ್ಥ ರಚಿಸಿದ ಕೀರ್ತನೆ ಆದದ್ದೆಲ್ಲ ಒಳಿತೆ ಆಯಿತು ರಚನೆ: ಶ್ರೀ ಪುರಂದರದಾಸರು ರಾಗ : ಪಂತುರಾವಳಿ ; ತಾಳ : ಆದಿತಾಳ ಆದದ್ದೆಲ್ಲ ಒಳಿತೆ ಆಯಿತು ನಮ್ಮ ಶ್ರೀಧರ ಸೇವೆ ಮಾಡಲು ಸಾಧನ ಸಂಪತ್ತಾಯಿತು; ದಂಡಿಗೆ ಬೆತ್ತ ಹಿಡಿಯೊದಕ್ಕೆ ಮಂಡೆ ಮಾಚಿ ನಾಚುತಲಿದ್ದೆ ಹೆಂಡತಿ ಸಂತತಿ ಸಾವಿರವಾಗಲಿ ದಂಡಿಗೆ ಬೆತ್ತ ಹಿಡಿಸಿದಳಯ್ಯ ಗೋಪಾಳ ಬುಟ್ಟಿ ಹಿಡಿಯೊದಕ್ಕೆ ಭೂಪತಿಯಂತೆ ಗರ್ವಿಸುತಿದ್ದೆ ಆ ಪತ್ನೀ ಕುಲ ಸಾವಿರವಾಗಲಿ ಗೋಪಾಳ ಬುಟ್ಟಿ ಹಿಡಿಸಿದಳಯ್ಯ ತುಳಸಿ ಮಾಲೆ ಹಾಕುವುದಕ್ಕೆ ಅರಸನಂತೆ ನಾಚುತಲಿದ್ದೆ ಸರಸಿಜಾಕ್ಷ ಪುರಂದರ ವಿಠ್ಠಲ ತುಳಸಿ ಮಾಲೆ ಹಾಕಿಸಿದನಯ್ಯ ಕವಿ ಮತ್ತು ಸಂಗೀತಗಾರ ಪುರಂದರದಾಸರ ಪದಗಳು ಪ್ರಾಸ ಮತ್ತು ಅರ್ಥದಲ್ಲಿ ಶ್ರೀಮಂತವಾಗಿವೆ. "ಕುದುರೆ ಅಂದಣ ಆನೆ ಬಯಸೋದು ನರಚಿತ್ತ ಪಾದಚಾರಿ ಆಗೋದು ಹರಿ ಚಿತ್ತವಯ್ಯ" </blockquote> ಪುರಂದರದಾಸರ ಪದಗಳು ಮುಂದೆ ಕರ್ನಾಟಕ ಸಂಗೀತ ಪದ್ಧತಿಯ ಬುನಾದಿಯಾದವು. ಶಾಸ್ತ್ರೀಯ ಸಂಗೀತವನ್ನು ಶ್ರೀ ಸಾಮಾನ್ಯನಿಗೆ ಪರಿಚಯ ಮಾಡಿಕೊಡಲು ಯತ್ನಿಸಿದ ಪುರಂದರದಾಸರು ಮಾಯಾಮಾಳವಗೌಳ ರಾಗದಿಂದ ಹಿಡಿದು ಹೊಸಬರಿಗೆ ಶಾಸ್ತ್ರೀಯ ಸಂಗೀತವನ್ನು ಕಲಿಸಿ ಕೊಡುವ ದಾರಿಯ ಬಗೆಗೆ ಯೋಚಿಸಿದರು. ಈಗಲೂ ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತದ ಪಾಠಗಳು ಪುರಂದರದಾಸರ ಸರಳೆ, ಜಂಟಿ ವರಸೆಗಳೊಂದಿಗೇ ಆರಂಭಿಸಲ್ಪಡುತ್ತವೆ. ಪುರಂದರದಾಸರ 'ಪಿಳ್ಳಾರಿ ಗೀತೆಗಳು' (ಉದಾ: ಲಂಬೋದರ ಲಕುಮಿಕರ...., ಕೆರೆಯ ನೀರನು ಕೆರೆಗೆ ಚೆಲ್ಲಿ.....ಇತ್ಯಾದಿ) ಸಂಗೀತದ ಸ್ವರ- ಸಾಹಿತ್ಯ- ತಾಳಗಳ ಸಂಯೋಜನೆಯನ್ನು ಅಭ್ಯಸಿಸಲು ಮೊದಲ ಮೆಟ್ಟಿಲು. ಕರ್ನಾಟಕ ಶಾಸ್ತ್ರೀಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ತ್ಯಾಗರಾಜರು ತಮ್ಮ "ಪ್ರಹ್ಲಾದ ಭಕ್ತಿ ವಿಜಯಮ್" ಎಂಬ ಲೇಖನದಲ್ಲಿ ಶ್ರೀ ಪುರಂದರ ದಾಸರನ್ನು ತಮ್ಮ ಸಂಗೀತ ಗುರುಗಳೆಂದು ಹೇಳಿಕೊಂಡಿದ್ದಾರೆ. ಹರಿನಾಮಸ್ಮರಣೆಯ ರೂಪದಲ್ಲಿ ರಚಿಸಿದ ಅವರ ಕೃತಿಗಳು ದೇವರನಾಮಗಳಾಗಿ ಪ್ರಸಿದ್ಧವಾಗಿವೆ. ಅವರ ಹರಿಭಕ್ತಿ ಹಾಗೂ ಸಂಗೀತದಲ್ಲಿನ ಪಾಂಡಿತ್ಯ ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟವಾದ ಸ್ಥಾನವನ್ನು ಪಡೆದು ದಾಸ ಸಾಹಿತ್ಯವನ್ನು ಶ್ರೀಮಂತವಾಗಿಸಿವೆ. ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹರಾದ ಪುರಂದರದಾಸರ ಸಾಧನೆಯನ್ನು ಕಂಡ ಸರ್ವರೂ 'ದಾಸರೆಂದರೆ ಪುರಂದರದಾಸರಯ್ಯಾ..!' ಎಂದು ಕೊಂಡಾಡಿದ್ದಾರೆ. ಇವರ ಎಲ್ಲ ಕೀರ್ತನೆಗಳೂ ಕನ್ನಡ ಭಾಷೆಯಲ್ಲಿದ್ದು, ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನಬಹುದು. ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು; ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು; ಅವರ ಮಗ ಮಧ್ವಪತಿದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ. ಕೀರ್ತನೆಗಳು ೧. ಮಾನವ ಜನ್ಮ ದೊಡ್ಡದು,ಇದ ಹಾನಿ ಮಾಡಲಿಬೇಡಿ ಹುಚ್ಚಪ್ಪಗಳಿರಾ|ಪ| ಹೆಚ್ಚಿನ ಕೀರ್ತನೆಗಳಿಗೆ ನೋಡಿ ಪುರಂದರದಾಸರ ಕೀರ್ತನೆ - ಬಾಹ್ಯ ಸಂಪರ್ಕಗಳು ಪುರಂದರ ದಾಸರು ಪುರಂದರ ದಾಸರ ಬಗ್ಗೆ ಪು.ತಿ.ನ. ಅವರ ಲೇಖನ ರಸಿಕ ಫೋರಮ್ ವಿಕಿಯಲ್ಲಿ ಪುರಂದರ ದಾಸರ ಬಗ್ಗೆಯ ಲೇಖನ ವಿಕಿಸೋರ್ಸ್ನಲ್ಲಿ: ವಿಕಿಸೋರ್ಸ್ನಲ್ಲಿ ದಾಸ ಸಾಹಿತ್ಯ: ಪುರಂದರ ದಾಸರ ಜನ್ಮಸ್ಥಳ ಕುರಿತಂತೆ ಕರ್ನಾಟಕ ಸರ್ಕಾರಕ್ಕೆ ತಜ್ಞ ವರದಿ ಸಲ್ಲಿಕೆ ಉಲ್ಲೇಖ ಭಾರತದ ಸಂಗೀತಗಾರರು ಸಂಗೀತ ಶಾಸ್ತ್ರೀಯ ಸಂಗೀತಗಾರರು ದಾಸ ಸಾಹಿತ್ಯ ಕನ್ನಡ ಸಾಹಿತಿಗಳು ಸಂತರು ಕನ್ನಡ ಕವಿಗಳು
1154
https://kn.wikipedia.org/wiki/%E0%B2%B9%E0%B3%86%E0%B2%9A%E0%B3%8D.%E0%B2%A1%E0%B2%BF.%E0%B2%A6%E0%B3%87%E0%B2%B5%E0%B3%87%E0%B2%97%E0%B3%8C%E0%B2%A1
ಹೆಚ್.ಡಿ.ದೇವೇಗೌಡ
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ ೧೨ ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. 'ಮಣ್ಣಿನ ಮಗ' ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು. ಜೀವನ ದೇವೇಗೌಡರು ಮೇ ೧೮, ೧೯೩೩ ರಂದು ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂಗ್‍ನಲ್ಲಿ ಡಿಪ್ಲೊಮಾ ಪಡೆದ ಬಳಿಕ, ದೇವೇಗೌಡ ಅವರು ಹಾಸನ ತಾಲ್ಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರನ್ನು 1954ರಲ್ಲಿ ವಿವಾಹವಾದರು. ಅವರಿಗೆ ಎಚ್.ಡಿ. ಕುಮಾರಸ್ವಾಮಿ ಹಾಗೂ ಎಚ್.ಡಿ. ರೇವಣ್ಣ ಸೇರಿದಂತೆ ನಾಲ್ಕು ಜನ ಗಂಡು ಮಕ್ಕಳೂ, ಇಬ್ಬರು ಹೆಣ್ಣು ಮಕ್ಕಳೂ ಇದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದರು. ಎಚ್.ಡಿ. ರೇವಣ್ಣ ಅವರು ಕರ್ನಾಟಕ ಸರ್ಕಾರದಲ್ಲಿ ಮಂತ್ರಿಗಳಾಗಿದ್ದರು. ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ ಅವರು ದೇವೇಗೌಡರ ಅಳಿಯ . ರಾಜಕೀಯದಲ್ಲಿ ರಾಮಕೃಷ್ಣ ಹೆಗಡೆ ಯವರನ್ನು ಮಿತ್ರರನ್ನಾಗಿಸಿ ಕೊಂಡರು. ಸಾರ್ವಜನಿಕ ಜೀವನ ೧೯೫೩ರಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದರು. ೧೯೬೨ ರವರೆಗೆ ಕಾಂಗ್ರೆಸ್ ಪಕ್ಷದಲ್ಲಿದ್ದು ನಂತರ, ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತು ವಿಧಾನ ಸಭೆಗೆ ಚುನಾಯಿತರಾದರು. ಮುಂದಿನ ಮೂರು ಚುನಾವಣೆಗಳಲ್ಲಿ ಸತತವಾಗಿ ಹೊಳೆನರಸೀಪುರ ಕ್ಷೇತ್ರದಿಂದ ವಿಧಾನಸಭೆಗೆ ಚುನಾಯಿತರಾದರು. ೧೯೭೨ ರಿಂದ ೧೯೭೬ ರವರೆಗೆ ಮತ್ತು ನವೆಂಬರ್ ೧೯೭೬ ರಿಂದ ೧೯೭೭ ರ ವರೆಗೆ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕರಾಗಿದ್ದರು. ೧೯೭೫-೭೬ರ ತುರ್ತು ಪರಿಸ್ಥಿತಿಯಲ್ಲಿ ಬಂಧನಕ್ಕೊಳಗಾಗಿದ್ದ ದೇವೇಗೌಡರು ನಂತರ ಕರ್ನಾಟಕ ಸರ್ಕಾರದಲ್ಲಿ ಲೋಕೋಪಯೋಗಿ ಮತ್ತು ನೀರಾವರಿ ಖಾತೆಗಳ ಸಚಿವರಾದರು. ೧೯೮೭ರಲ್ಲಿ ನೀರಾವರಿ ಖಾತೆಗೆ ಸಾಕಷ್ಟು ಹಣ ಮಂಜೂರು ಮಾಡದೆ ಇದ್ದುದರ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದರು. ೧೯೯೧ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಚುನಾಯಿತರಾದರು. ಮುಖ್ಯಮಂತ್ರಿ ಇದರ ನಂತರ ಜನತಾ ದಳಕ್ಕೆ ರಾಜ್ಯಾಧ್ಯಕ್ಷರಾದ ದೇವೇಗೌಡರು ೧೯೯೪ ರಲ್ಲಿ ಕರ್ನಾಟಕ ರಾಜ್ಯದ ೧೪ ನೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಮಂತ್ರಿ ೧೯೯೬ ರಲ್ಲಿ ಯಾವ ಒಂದು ರಾಜಕೀಯ ಪಕ್ಷಕ್ಕೂ ಲೋಕಸಭೆಯಲ್ಲಿ ಸ್ಪಷ್ಟ ಬಹುಮತವಿರಲಿಲ್ಲ. ಆಗ ಯುನೈಟೆಡ್ ಫ್ರಂಟ್ (ಕಾಂಗ್ರೆಸ್ ಹೊರತು ಮತ್ತು ಬಿಜೆಪಿ ಹೊರತುಪಡಿಸಿದ ಪ್ರಾದೇಶಿಕ ಪಕ್ಷಗಳ ಒಂದು ಸಂಘ) ಕಾಂಗ್ರೆಸ್ ಬೆಂಬಲದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ನಿರ್ಧರಿಸಿದರು. ಅನಿರೀಕ್ಷಿತವಾಗಿ, ದೇವೇಗೌಡರು ಸರ್ಕಾರದ ಮುಖ್ಯಸ್ಥರಾಗಿ ಆಯ್ಕೆಯಾದರು ಮತ್ತು ಭಾರತದ 11 ನೇ ಪ್ರಧಾನಿಯಾದರು. ಅವರು 1 ಜೂನ್ 1996 ರಂದು ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು ಮತ್ತು 1997 ರ ಏಪ್ರಿಲ್ 21 ರವರೆಗೆ ಅಧಿಕಾರದಲ್ಲಿ ಮುಂದುವರೆದರು. ಅಲ್ಲದೆ, ಅವರು ಯುನೈಟೆಡ್ ಫ್ರಂಟ್‌ನ ಸ್ಟೀರಿಂಗ್ ಕಮಿಟಿಯ ಅಧ್ಯಕ್ಷರಾಗಿದ್ದರು. ದೆಹಲಿ ಮೆಟ್ರೋ ಯೋಜನೆಯ ಕೀರ್ತಿ ಅವರು ಸಲ್ಲುತ್ತದೆ. ನಂತರದ ವರ್ಷಗಳಲ್ಲಿ ಜಾತ್ಯತೀತ ಜನತಾ ದಳದ ರಾಷ್ಟ್ರಾಧ್ಯಕ್ಷರಾಗಿದ್ದಾರೆ. ಉಲ್ಲೇಖಗಳು ಕರ್ನಾಟಕದ ರಾಜಕೀಯ ಕರ್ನಾಟಕದ ಮುಖ್ಯಮಂತ್ರಿಗಳು ಭಾರತದ ಪ್ರಧಾನ ಮಂತ್ರಿಗಳು ೧೯೩೩ ಜನನ ಕರ್ನಾಟಕದ ವಿಧಾನಸಭಾ ಸದಸ್ಯರು ಕರ್ನಾಟಕದ ಲೋಕ ಸಭೆ ಸದಸ್ಯರುಕರ್ನಾಟಕ ರಾಜಕಾರಣಿಗಳು
1156
https://kn.wikipedia.org/wiki/%E0%B2%95%E0%B2%B0%E0%B3%8D%E0%B2%A8%E0%B2%BE%E0%B2%9F%E0%B2%95%20%E0%B2%B8%E0%B2%82%E0%B2%97%E0%B3%80%E0%B2%A4
ಕರ್ನಾಟಕ ಸಂಗೀತ
ಕರ್ನಾಟಕ ಸಂಗೀತ (ಸಂಸ್ಕೃತ: कर्णाटक संगीतम्) ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತ. ಭಾರತದ ಶಾಸ್ತ್ರೀಯ ಸಂಗೀತದ ಇನ್ನೊಂದು ಮುಖ್ಯ ಪದ್ಧತಿಯಾದ ಹಿಂದುಸ್ತಾನಿ ಸಂಗೀತದಿಂದ ಇದರ ಮುಖ್ಯ ವ್ಯತ್ಯಾಸವೆಂದರೆ ವ್ಯವಸ್ಥಿತ ರಚನೆಗಳ ಹೆಚ್ಚಿನ ಪ್ರಾಮುಖ್ಯತೆ ಮತ್ತು ಇನ್ನೂ ಬಿಗಿಯಾದ ನಿಯಮಗಳ ಅಸ್ತಿತ್ವ. ಕರ್ನಾಟಕ ಸಂಗೀತ ಹೆಚ್ಚು-ಕಡಿಮೆ ಸಂಪೂರ್ಣವಾಗಿ ಭಕ್ತಿಪ್ರಧಾನವಾದದ್ದು. ರಚನೆಗಳು ಸಾಮಾನ್ಯವಾಗಿ ಹಿಂದೂ ದೇವ-ದೇವತೆಗಳನ್ನು ಕುರಿತವು. ಜಾತ್ಯತೀತ ರಚನೆಗಳು ಸಾಮಾನ್ಯವಾಗಿ ಹಾಸ್ಯಪ್ರಧಾನ, ಮಕ್ಕಳ ಹಾಡುಗಳು, ಇಲ್ಲವೇ ಚಿತ್ರಗೀತೆಗಳು. ಭಾರತೀಯ ಸಂಗೀತದ ಎಲ್ಲ ಮುಖ್ಯ ಪದ್ಧತಿಗಳಂತೆ, ಕರ್ನಾಟಕ ಸಂಗೀತದ ಎರಡು ಪ್ರಧಾನ ಅಂಶಗಳೆಂದರೆ ರಾಗ (ಶ್ರುತಿಗೆ ಸಂಬಂಧಪಟ್ಟದ್ದು) ಮತ್ತು ತಾಳ(ಸಂಗೀತ) (ಲಯಕ್ಕೆ ಸಂಬಂಧಪಟ್ಟದ್ದು). ಚರಿತ್ರೆ ಕರ್ನಾಟಕ ಸಂಗೀತ ಹಿಂದುಸ್ತಾನಿ ಸಂಗೀತದೊಂದಿಗೆ ಪ್ರಾಚೀನ ಹಿಂದೂ ಧರ್ಮದ ಅಧ್ಯಾತ್ಮಿಕ ಸಂಗೀತವಾಗಿ ಸಾಮವೇದ ಸಂಪ್ರದಾಯದಲ್ಲಿ ಹುಟ್ಟಿತು. ೧೨ ನೆ ಮತ್ತು ೧೩ ನೆ ಶತಮಾನಗಳಲ್ಲಿ ಮೊಘಲರು ಉತ್ತರ ಭಾರತವನ್ನು ಆಳಲು ಪ್ರಾರಂಭಿಸಿದ ನಂತರ ಭಾರತೀಯ ಸಂಗೀತದಲ್ಲಿ ಎರಡು ಬೇರೆ ಬೇರೆ ಪದ್ಧತಿಗಳು ಉಂಟಾದವು. ಉತ್ತರ ಭಾರತದಲ್ಲಿ ಭಾರತೀಯ ಸಂಗೀತ ಅರಾಬಿಕ್ ಸಂಗೀತದ ಪ್ರಭಾವಕ್ಕೆ ಒಳಗಾಗಿ ಹಿಂದುಸ್ತಾನಿ ಸಂಗೀತ ಪದ್ಧತಿಗೆ ದಾರಿ ಮಾಡಿಕೊಟ್ಟಿತು. ಕರ್ನಾಟಕ ಸಂಗೀತ ಎಂಬ ಪದದ ವ್ಯುತ್ಪತ್ತಿಯ ಬಗ್ಗೆ ವಿವಿಧ ಊಹೆಗಳಿವೆ. ಕರ್ನಾಟಕ ಸಂಗೀತ ಕರ್ನಾಟಕದಲ್ಲಿ ಉಗಮಗೊಂಡಿದ್ದರಿಂದ ಈ ಹೆಸರು ಬಂದಿರಬಹುದು. ಇತರ ವ್ಯುತ್ಪತ್ತಿಗಳೂ ಸಹ ಪ್ರತಿಪಾದಿಸಲ್ಪಟ್ಟಿವೆ. "ಕರ್ಣೇ ಅಟತಿ ಇತಿ ಕರ್ಣಾಟಕಮ್" ಇವುಗಳಲ್ಲಿ ಒಂದು - ಕಿವಿಗೆ ಇಂಪಾಗಿ ಕೇಳುವ ಸಂಗೀತ ಎಂದರ್ಥ.ಪುರಂದರದಾಸರ ಸಮಕಾಲೀನನಾದ ಪುಂಡರೀಕ ವಿಠಲ ಕರ್ನಾಟಕ ಸಂಗೀತದ ಆದ್ಯ ಪ್ರವರ್ತಕಾಚಾರ್ಯನಾದ ಕನ್ನಡಿಗನು. ಶ್ರೀ ಪುರಂದರದಾಸರು (೧೪೯೪ – ೧೫೬೪) 'ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ' ಎಂದು ಹೆಸರಾದವರು. ಪುರಂದರದಾಸರು ಕರ್ನಾಟಕದವರು ಹಾಗು ದಾಸಪದ್ಧತಿಯ ಪ್ರಮುಖರು. ಮುಖ್ಯವಾಗಿ ಪುಂಡರೀಕ ವಿಠಲ, ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥ ದಾಸ, ವಿಜಯ ದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ. ಸಾವಿರಾರು ಕೀರ್ತನೆಗಳನ್ನು ರಚಿಸಿದ ಪುರಂದರದಾಸರ ಸುಮಾರು ೧೦೦೦ ಕೀರ್ತನೆಗಳು ಇಂದಿಗೂ ಉಳಿದಿವೆ. ಇವರ ಎಲ್ಲ ಕೀರ್ತನೆಗಳೂ ಕನ್ನಡ ಭಾಷೆಯಲ್ಲಿದ್ದು ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನ ಬಹುದು. ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು; ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು; ಅವರ ಮಗ ಮಧ್ವಪತಿದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ. ಶಾಸ್ತ್ರ ಸಪ್ತ ಸ್ವರಗಳು ಕರ್ನಾಟಕ ಸಂಗೀತದಲ್ಲಿ ಏಳು ಮೂಲ ಸ್ವರಗಳಿವೆ: ಸ-ರಿ-ಗ-ಮ-ಪ-ದ-ನಿ. ಈ ಏಳು ಸ್ವರಗಳ ದೀರ್ಘ ಹೆಸರುಗಳು ಷಡ್ಜ, ಋಷಭ, ಗಾಂಧಾರ, ಮಧ್ಯಮ, ಪಂಚಮ, ಧೈವತ ಮತ್ತು ನಿಷಾದ. ಸ ಮತ್ತು ಪ ಸ್ವರಗಳನ್ನು ಬಿಟ್ಟರೆ ಉಳಿದವು ಮೂರು ಬೇರೆ ಬೇರೆ ರೂಪಗಳಲ್ಲಿ ಉಂಟಾಗಬಹುದು. ಬದಲಾಗದ ಸ ಮತ್ತು ಪ ಸ್ವರಗಳನ್ನು ಪ್ರಕೃತಿ ಸ್ವರಗಳೆಂದು ಹಾಗೂ ರಿ, ಗ, ಮ, ದ ಮತ್ತು ನಿ ಸ್ವರಗಳನ್ನು ವಿಕೃತಿ ಸ್ವರಗಳೆಂದು ಕರೆಯಲಾಗುತ್ತದೆ. ಸ್ವರ ಸ್ಥಾನಗಳ ಪಟ್ಟಿ ಹೀಗಿದೆ. ಷಡ್ಜ - ಸ ಶುದ್ಧ ಋಷಭ - ರಿ೧ ಚತುಶ್ರುತಿ ಋಷಭ - ರಿ೨ ಷಟ್ಶ್ರುತಿ ಋಷಭ - ರಿ೩ ಶುದ್ಧ ಗಾಂಧಾರ - ಗ೧ ಸಾಧಾರಣ ಗಾಂಧಾರ - ಗ೨ ಅಂತರ ಗಾಂಧಾರ - ಗ೩ ಶುದ್ಧ ಮಧ್ಯಮ - ಮ೧ ಪ್ರತಿ ಮಧ್ಯಮ - ಮ೨ ಪಂಚಮ - ಪ ಶುದ್ಧ ಧೈವತ - ದ೧ ಚತುಶ್ರುತಿ ಧೈವತ - ದ೨ ಷಟ್ಶ್ರುತಿ ಧೈವತ - ದ೩ ಶುದ್ಧ ನಿಷಾದ - ನಿ೧ ಕೈಶಿಕಿ ನಿಷಾದ - ನಿ೨ ಕಾಕಳಿ ನಿಷಾದ - ನಿ೩ ಷಟ್ಶ್ರುತಿ ಋಷಭ ಮತ್ತು ಸಾಧರಣ ಗಾಂಧಾರ ಎರಡು ಸಮನಾದ ಸ್ವರಗಳು ಹಾಗೆಯೆ ಚತುಶ್ರುತಿ ಧೈವತ ಮತ್ತು ಶುದ್ಧ ನಿಷಾದ ಸಮನಾದ ಸ್ವರಗಳು. ಯಾವುದೇ ಒಂದು ರಾಗದಲ್ಲಿ ಒಂದು ಸ್ವರದ ಒಂದು ರೂಪ ಮಾತ್ರ ಉಂಟಾಗಬಹುದು. ಕೆಲವು "ಹಗುರ" ರಾಗಗಳಲ್ಲಿ (ಉದಾ: ಬೇಹಾಗ್)ಕೆಲವು ಸ್ವರಗಳು ಎರಡು ರೂಪಗಳಲ್ಲಿ ಕಾಣಿಸಿಕೊಳ್ಳಬಹುದು (ಆರೋಹಣದಲ್ಲಿ ಒಂದು ಮತ್ತು ಅವರೋಹಣದಲ್ಲಿ ಒಂದು). ಒಂದು ರಾಗದ ಆರೋಹಣ ಮತ್ತು ಅವರೋಹಣದಲ್ಲಿ ಐದು, ಆರು ಇಲ್ಲವೇ ಏಳು ಸ್ವರಗಳು ಇರಬಹುದು. ರಾಗ ರಾಗ ಎಂಬುದು ಶ್ರುತಿಬದ್ಧವಾದ ರಚನೆಯನ್ನು ಸೃಷ್ಟಿಸಲು ಇರುವ ನಿಯಮಗಳ ವ್ಯವಸ್ಥೆ. ಪ್ರತಿ ರಾಗವೂ ಈ ಕೆಳಗಿನ ಅಂಶಗಳನ್ನು ಹೊಂದಿರುತ್ತದೆ. ಮೇಲಕ್ಕೇರುವ ಸ್ವರಗಳ ಕ್ರಮ (ಆರೋಹಣ) ಕೆಳಗಿಳಿಯುವ ಸ್ವರಗಳ ಕ್ರಮ (ಅವರೋಹಣ) ಮುಖ್ಯ ಮತ್ತು ಅಮುಖ್ಯ ಸ್ವರಗಳು ಸ್ವರಗಳನ್ನು ಅಲಂಕೃತವಾಗಿರಿಸುವ ಕ್ರಮಗಳು (ಗಮಕ) ..ಇತ್ಯಾದಿ. ಮೇಳಕರ್ತ ವ್ಯವಸ್ಥೆ ಆರೋಹಣ ಮತ್ತು ಅವರೋಹಣಗಳಲ್ಲಿ ಏಳೂ ಸ್ವರಗಳನ್ನು ಹೊಂದಿರುವ ರಾಗಗಳನ್ನು ಸಂಪೂರ್ಣ ರಾಗಗಳು ಎಂದು ಕರೆಯಲಾಗುತ್ತದೆ. ಸಂಪೂರ್ಣ ರಾಗಗಳನ್ನು ಮೇಳಕರ್ತ ವ್ಯವಸ್ಥೆಯಲ್ಲಿ ವರ್ಗೀಕರಿಸಲಾಗಿದೆ. ಒಟ್ಟು ೭೨ ಮೇಳಕರ್ತ ರಾಗಗಳಿದ್ದು, ಇವುಗಳಲ್ಲಿ ೩೬ ರಾಗಗಳಲ್ಲಿ ನಾಲ್ಕನೆಯ ಸ್ವರ "ಮ" ಶುದ್ದ ಮಧ್ಯಮವಾಗಿದ್ದು, ಇನ್ನುಳಿದ ೩೬ ಮೇಳಕರ್ತ ರಾಗಗಳಲ್ಲಿ ನಾಲ್ಕನೆಯ ಸ್ವರ "ಮ" ಪ್ರತಿ ಮಧ್ಯಮವಾಗಿರುವುದು(ಮ ಸ್ವರದ ಎರಡನೆಯ ರೂಪ). ಈ ರಾಗಗಳನ್ನು ಆರರ ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಈ ಗುಂಪುಗಳಿಗೆ ಚಕ್ರಗಳೆಂದು ಹೆಸರು. ಹೀಗೆ ಮೇಳಕರ್ತರಾಗಗಳ ೧೨ ಚಕ್ರಗಳಿವೆ. ಮೇಳಕರ್ತರಾಗಗಳ ಆರೋಹಣ ಮತ್ತು ಅವರೋಹಣಗಳಲ್ಲಿ ಪ್ರತಿ ಸ್ವರವೂ ಒಂದು ಮತ್ತು ಒಂದೇ ಒಂದು ಬಾರಿ ಕಂಡು ಬರುತ್ತದೆ. ಕೆಲವು ಸ್ವರಗಳು ಇಲ್ಲದೆ ಇರುವ ರಾಗಗಳಿಗೆ ವರ್ಜ್ಯ ರಾಗಗಳೆಂದು ಹೆಸರು. ಮೇಳಕರ್ತ ರಾಗದ ಕೆಲವು ಸ್ವರಗಳನ್ನು ಬಳಸಿಕೊಂಡು, ಕೆಲವನ್ನು ಬಿಟ್ಟು ಇರುವ ರಾಗಗಳಿಗೆ ಜನ್ಯ ರಾಗಗಳು ಎಂದು ಹೆಸರು. ಆರೋಹಣ ಮತ್ತು ಅವರೋಹಣಗಳು ವಕ್ರವಾಗಿರುವ ರಾಗಗಳು ಪೂರ್ಣ ರಾಗಗಳಾಗಿದ್ದರೆ ಅವುಗಳಿಗೆ "ವಕ್ರ ಸಂಪೂರ್ಣ" ಎಂದು ಹೆಸರು. ಮೇಳಕರ್ತ ರಾಗಗಳ ಪಟ್ಟಿ ಇಲ್ಲಿದೆ ತಾಳ ತಾಳ ಎಂಬುದು ಸಂಗೀತ ರಚನೆಗಳ ಲಯವಿನ್ಯಾಸವನ್ನು ನಿರ್ದೇಶಿಸುತ್ತದೆ. ಸಂಗೀತದಲ್ಲಿ ಸಮಯದ ಮೂಲಮಾನಕ್ಕೆ ಮಾತ್ರೆ ಎಂದು ಹೆಸರು. ಸಂಗೀತಗಾರರು ತಮ್ಮ ಕೈಯನ್ನು ಒಂದು ನಿರ್ದಿಷ್ಟ ರೀತಿಯಲ್ಲಿ ತಟ್ಟುವುದರ ಮೂಲಕ (ತಾಳ ಹಾಕುವುದು) ಈ ಲಯದ ಲೆಕ್ಕವಿಟ್ಟು ಕೊಳ್ಳುತ್ತಾರೆ. ತಾಳ ಸಮಯದ ಲೆಕ್ಕವನ್ನೂ ಇಟ್ಟುಕೊಳ್ಳಲು ಉಪಯೋಗವಾಗುತ್ತದೆ. ತಾಳಗಳನ್ನು ಏಳು ಗುಂಪುಗಳಾಗಿ ವರ್ಗೀಕರಿಸಲಾಗಿದೆ: ಧ್ರುವ, ಮಠ್ಯ, ರೂಪಕ, ಝಂಪೆ, ತ್ರಿಪುಟ, ಅಟ್ಟ, ಏಕ. ಕರ್ನಾಟಕ ಸಂಗೀತದಲ್ಲಿ ತಾಳವನ್ನು ತೋರಿಸಲು ಸಾಮಾನ್ಯವಾಗಿ ಉಪಯೋಗಿಸುವ ವಾದ್ಯ ಮೃದಂಗ. ಕೃತಿಗಳು ಕರ್ನಾಟಕ ಸಂಗೀತದ ಬಹುಪಾಲು ಕೃತಿಗಳು ಕನ್ನಡ ಅಥವಾ ಸಂಸ್ಕೃತ ಭಾಷೆಯಲ್ಲಿವೆ. ತೆಲುಗು ಮತ್ತು ತಮಿಳು ಸಹ ಕೃತಿಗಳ ರಚನೆಯಲ್ಲಿ ಉಪಯೋಗಿಸಲ್ಪಟ್ಟ ಭಾಷೆಗಳು. ಕರ್ನಾಟಕ ಸಂಗೀತದ ಕೃತಿಗಳಲ್ಲಿ ಪ್ರಸಿದ್ಧವಾದ ಕೆಲವೆಂದರೆ- ತ್ಯಾಗರಾಜ ವಿರಚಿತ ಪಂಚರತ್ನ ಕೃತಿಗಳು, ಮುತ್ತುಸ್ವಾಮಿ ದೀಕ್ಷಿತರು ವಿರಚಿಸಿದ ನವಗ್ರಹ ಕೃತಿಗಳು ಮತ್ತು ಜಯದೇವನ ಅಷ್ಟಪದಿಗಳು. ಕೀರ್ತನೆ ಕೀರ್ತನೆಗಳು ಸಾಮಾನ್ಯವಾಗಿ ಮೂರು ಭಾಗಗಳನ್ನು ಹೊಂದಿರುತ್ತವೆ: ಪಲ್ಲವಿ - ಸಾಮಾನ್ಯವಾಗಿ ಎರಡು ಸಾಲುಗಳು ಅನುಪಲ್ಲವಿ - ಸಾಮಾನ್ಯವಾಗಿ ಎರಡು ಸಾಲುಗಳು ಚರಣ - ಪಲ್ಲವಿ ಮತ್ತು ಅನುಪಲ್ಲವಿಗಿಂತ ದೀರ್ಘವಾಗಿರುತ್ತದೆ ಕೆಲವು ಕೀರ್ತನೆಗಳಲ್ಲಿ ಅನುಪಲ್ಲವಿ ಮತ್ತು ಚರಣದ ನಡುವೆ ಚಿಟ್ಟೆಸ್ವರ ಎಂಬ ಭಾಗವಿರುತ್ತದೆ (ಉದಾ: "ಸಾರಸಮುಖಿ ಸಕಲ ಭಾಗ್ಯದೆ..."). ಚಿಟ್ಟೆಸ್ವರದಲ್ಲಿ ಪದಗಳಿಲ್ಲದೆ ಕೇವಲ ಸ್ವರಗಳು ಮಾತ್ರ ಇರುತ್ತವೆ. ಕೆಲವು ಬಾರಿ ಕೃತಿಯನ್ನು ರಚಿಸಿರುವ ವಾಗ್ಗೇಯಕಾರರೇ ಚಿಟ್ಟೆ ಸ್ವರವನ್ನೂ ರಚಿಸಿದ್ದರೆ, ಇನ್ನು ಕೆಲವೆಡೆ ನಂತರ ಬಂದ ಇತರ ಸಂಗೀತ ವಿದ್ವಾಂಸರು ಚಿಟ್ಟೆಸ್ವರವನ್ನು ಸೇರಿಸಿರುವುದೂ ಉಂಟು. ಇನ್ನು ಕೆಲವು ಕೀರ್ತನೆಗಳಲ್ಲಿ ಚರಣದ ನಂತರ ಮಧ್ಯಮ ಕಾಲ ಎಂಬ ಭಾಗವಿರುತ್ತದೆ. ಮಧ್ಯಮ ಕಾಲವನ್ನು ಸಾಮಾನ್ಯವಾಗಿ ದ್ವಿಗುಣ ವೇಗದಲ್ಲಿ ಹಾಡಲಾಗುತ್ತದೆ. ವರ್ಣ ವರ್ಣ ಎಂಬುದು ಒಂದು ರಾಗದ ಸಂಪೂರ್ಣ ವರ್ಣನೆಯುಳ್ಳ ವಿಶೇಷ ಕೃತಿ. ಆರೋಹಣ ಮತ್ತು ಅವರೋಹಣ, ಮುಖ್ಯ ಸ್ವರಗಳು, ಸಾಮಾನ್ಯ ಪದಪುಂಜಗಳು ಮೊದಲಾದ ಒಂದು ರಾಗದ ಎಲ್ಲ ಅಂಶಗಳನ್ನೂ ಒಳಗೊಂಡಿರುವ ಕೃತಿ. ವರ್ಣದಲ್ಲಿ ಇರುವ ಭಾಗಗಳೆಂದರೆ ಪಲ್ಲವಿ, ಅನುಪಲ್ಲವಿ, ಮುಕ್ತಾಯಿ ಸ್ವರ (ಕೀರ್ತನೆಯ ಚಿತ್ತಸ್ವರದಂತೆ), ಚರಣ ಮತ್ತು ಚಿಟ್ಟೆಸ್ವರ. ಸಾಹಿತ್ಯವು ಶೃಂಗಾರವಾಗಿರಬಹುದು ಅಥವಾ ಭಕ್ತಿಪ್ರಧಾನವಾಗಿರಬಹುದು. ಪೂರ್ವಾ೦ಗ ಮತ್ತು ಉತ್ತರಾಂಗಗಳು ಪ್ರತ್ಯೇಕವಾಗಿದ್ದು, ಪೂರ್ವಾ೦ಗದಲ್ಲಿ ಪಲ್ಲವಿ, ಅನುಪಲ್ಲವಿ, ಚಿಟ್ಟೆಸ್ವರಾಗಳನ್ನು ನಿರೂಪಿಸಿ, ನಂತರ ಪಲ್ಲವಿಯ ಒಂದು ಆವರ್ತವನ್ನು ಹಾಡಿ ಪೂರ್ವಾ೦ಗವನ್ನು ಮುಗಿಸಬೇಕು. ಉತ್ತರಾಂಗದಲ್ಲಿ ಚರಣವನ್ನು ಒಂದಾವರ್ತಿ ನಿರೂಪಿಸಿ, ಎತ್ತುಗಡೆ ಸ್ವರಗಳನ್ನು ಹಾಡಬೇಕು. ಪ್ರತಿಯೊಂದು ಎತ್ತುಗಡೆಸ್ವರವನ್ನು ನಿರೂಪಿಸಿದ ನಂತರ ಚರಣ ವನ್ನು ಎತ್ತಿಕೊಳ್ಳಬೇಕು. ಕರ್ನಾಟಕ ಸಂಗೀತದಲ್ಲಿ ಉಪಯೋಗಗೊಳ್ಳುವ ಕೃತಿಗಳ ಇತರ ರೂಪಗಳಲ್ಲಿ ಸ್ವರಜತಿ ಮತ್ತು ಗೀತೆಗಳನ್ನು ಹೆಸರಿಸಬಹುದು. ಮನೋಧರ್ಮ ಸಂಗೀತ ಸಾಮಾನ್ಯವಾಗಿ ಸಂಗೀತ ಕಛೇರಿಗಳಲ್ಲಿ ಪೂರ್ವ ತಯಾರಿಯಿಲ್ಲದೆ ಸಂಗೀತಗಾರರ ಮನೋಧರ್ಮಕ್ಕನುಗುಣವಾಗಿ ಪರಿಚಯಿಸಲ್ಪಡುವ ಅಂಶಗಳಿರುತ್ತವೆ. ಸರಾಸರಿ ಒಂದು ಕಛೇರಿಯ ಶೇ.೮೦ ಭಾಗ ಈ ರೀತಿಯ ಮನೋಧರ್ಮ ಸಂಗೀತವನ್ನು ಒಳಗೊಂಡಿರುತ್ತದೆ. ನಾಲ್ಕು ಪ್ರಮುಖ ರೀತಿಯ ಮನೋಧರ್ಮ ಸಂಗೀತವನ್ನು ಗುರುತಿಸಲಾಗಿದೆ: ರಾಗ ಆಲಾಪನೆ ಇದು ಸಾಮಾನ್ಯವಾಗಿ ಒಂದು ಕೃತಿಯ ಆರಂಭದಲ್ಲಿ ಹಾಡಲಾಗುತ್ತದೆ (ವಾದ್ಯಗಳ ಸಂದರ್ಭದಲ್ಲಿ ನುಡಿಸಲಾಗುತ್ತದೆ). ಇದು ಕೇಳುಗರಲ್ಲಿ ಆ ಕೃತಿಯನ್ನು ಹಾಡಲ್ಪಡುವ ರಾಗದ ಭಾವವನ್ನು ಮೂಡಿಸುವ ಉದ್ದೇಶವನ್ನು ಹೊಂದಿರುತ್ತದೆ. ನಿಧಾನವಾಗಿ ಮುಂದೆ ಸಾಗುವ ಈ ಹಂತ, ತಾಳದ ಬದ್ಧತೆಯಿಲ್ಲದೆ ರಾಗದ ವಿವಿಧ ಗುಣಗಳನ್ನು ಪ್ರದರ್ಶಿಸುತ್ತದೆ. ಆ ರಾಗದ ಜೀವ ಸ್ವರಗಳನ್ನು ಆಧಾರವಾಗಿಟ್ಟುಕೊಂಡು, ವಿವಿಧ ಹಂತಗಳಲ್ಲಿ ವಿಸ್ತರಿಸಲ್ಪಡುತ್ತದೆ. ಸಾಮಾನ್ಯವಾಗಿ ಮಂದ್ರಸ್ಥಾಯಿಯಿಂದ ಆರಂಭವಾಗುವ ಈ ರಾಗ ಪರಿಚಯದ ಪದ್ಧತಿ ಕೆಲಕಾಲ ಅಲ್ಲಿಯೇ ನೆಲೆಸಿ ಅಲ್ಲಿಂದ ಮಧ್ಯಮಸ್ಥಾಯಿಗೆ ಬಂದು ಅಲ್ಲಿ ಪ್ರಕೃತಿ ಸ್ವರವಿದ್ದರೆ ಅದರ ಆಧಾರದ ಮೇಲೆ ಸ್ವಲ್ಪ ಹೊತ್ತು ವಿಶ್ರಮಿಸಿ ಮುಂದೆ ತಾರಸ್ಥಾಯಿಗೆ ಯಾವ ಅಡಚಣೆಯೂ ಇಲ್ಲದೆ ಸುಲಭವಾಗಿ ತೇಲಿದಂತೆ ಮೇಲೇರುತ್ತದೆ. ತಾರಸ್ಥಾಯಿಯಲ್ಲಿ ರಾಗದ ಎಲ್ಲಾ ಗುಣಗಳನ್ನೂ, ರೂಪಗಳನ್ನೂ ಅನಾವರಣಗೊಳಿಸಿ ನಂತರ ಮತ್ತೆ ಮಧ್ಯಮಸ್ಥಾಯಿಗೆ ಬಂದು ಅಲ್ಲಿಂದ ಜಾರಿದಂತೆ ಮಂದ್ರಕ್ಕೆ ಇಳಿಸು ಒಂದು ದೀರ್ಘ ನಿಲುಗಡೆಯೊಡನೆ ನಿಲ್ಲುತ್ತದೆ. ನೆರವಲ್ ಈ ಹಂತವನ್ನು ಹೆಚ್ಚು ಅನುಭವವುಳ್ಳ ಸಂಗೀತಗಾರರು ಮಾತ್ರ ಉಪಯೋಗಿಸುತ್ತಾರೆ. ಕೃತಿಯ ಯಾವುದಾದರೂ ಒಂದೆರಡು ಸಾಲುಗಳನ್ನು ವಿಧ ವಿಧವಾಗಿ ಪುನಃ ಪುನಃ ಆವರ್ತಿಸಿ ರಾಗ ಮತ್ತು ತಾಳದ ಗುಣಗಳನ್ನು ಮತ್ತು ವಿವಿಧ ಅಲಂಕಾರಗಳನ್ನು ಪ್ರದರ್ಶಿಸಲಾಗುತ್ತದೆ. ಇದು ಪೂರ್ಣ ವಾಗಿ ಸಂಗೀತಗಾರನ ಪ್ರತಿಭೆಯನ್ನು ಪ್ರದರ್ಶಿಸುತ್ತದೆ. ಕಲ್ಪನಾ ಸ್ವರ ಎಲ್ಲಕ್ಕಿಂತ ಸರಳ ರೀತಿಯ ಮನೋಧರ್ಮ ಸಂಗೀತ; ಈ ಹಂತದಲ್ಲಿ ಅನೇಕ ಕಲ್ಪನಾ ಸ್ವರಗಳ ಪುಂಜಗಳನ್ನು ಹಾಡಲಾಗುತ್ತದೆ. ಈ ಪುಂಜಗಳಲ್ಲಿ ಸ್ವರಗಳು ಜೋಡಣೆಗೊಳ್ಳುವ ಕ್ರಮ ಆ ರಾಗದ ನಿಯಮಗಳನ್ನು ಅವಲಂಬಿಸಿರುತ್ತದೆ. ಪ್ರತಿಯೊಂದು ರಾಗಕ್ಕೂ ಅದರದೇ ಆದ ಒಂದು ಓಟ ಮತ್ತು ವಿಧ ಇದೆ. ಯಾವುದೇ ರಾಗದ ವಿಸ್ತರಣೆಯಾದರೂ ಸರಿ, ಕಲ್ಪನಾ ಸ್ವರರಚನೆಯಾದರೂ ಸರಿ ಅದು ನಿರ್ಬಂಧಿಸಿದ ಆ ಚೌಕಟ್ಟಿನ ಒಳಗೇ ಇರಬೇಕು. ತಾನ ಈ ಹಂತವನ್ನು ಮೊಟ್ಟ ಮೊದಲು ವೀಣೆಯ ಮೇಲೆ ನುಡಿಸಲಿಕ್ಕಾಗಿ ಬೆಳೆಸಲಾಯಿತು. "ಅನಂತಮ್" ಎಂಬ ಪದವನ್ನು ಪುನಃ ಪುನಃ ವಿಶೇಷ ಅಲಂಕಾರಗಳೊಂದಿಗೆ ಆವರ್ತಿಸಲಾಗುತ್ತದೆ. "ಅನಂತಮಾನಂತಮಾನಂತ...." ಎಂಬುದು "ತಾನಮ್ತಾನಮ್ತಾನಮ್..." ಎಂದು ಪದಾಂತರವಾಗಿದೆ. ರಾಗ ತಾನ ಪಲ್ಲವಿ ಇದು ರಾಗ ಆಲಾಪನೆ, ತಾನ ಮತ್ತು ನೆರವಲ್ ಗಳನ್ನು ಒಳಗೊಂಡ ಸಂಯುಕ್ತ ಹಂತ. ನೆರವಲ್ ಹಂತದ ನಂತರ ಪಲ್ಲವಿಯನ್ನು ಎರಡು ಬಾರಿ ಪುನರಾವರ್ತಿಸಿ, ನಂತರ ಅರ್ಧ ವೇಗದಲ್ಲಿ ಆವರ್ತಿಸಿ, ಮತ್ತೆ ದ್ವಿಗುಣ ವೇಗದಲ್ಲಿ ಮತ್ತು ನಾಲ್ಕರಷ್ಟು ವೇಗದಲ್ಲಿ ಪುನರಾವರ್ತಿಸಲಾಗುತ್ತದೆ. ಕರ್ನಾಟಕ ಸಂಗೀತ ಕಛೇರಿ ಕರ್ನಾಟಕ ಸಂಗೀತ ಕಛೇರಿಗಳಲ್ಲಿ ಸಾಮಾನ್ಯವಾಗಿ ಇರುವ ಸಂಗೀತಗಾರರೆಂದರೆ: ಒಬ್ಬ ಹಾಡುಗಾರರು (ಇಲ್ಲವೇ ಪ್ರಧಾನ ವಾದ್ಯವನ್ನು ನುಡಿಸುವವರು), ಒಂದು ಪಕ್ಕವಾದ್ಯ (ಸಾಮಾನ್ಯವಾಗಿ ಪಿಟೀಲು), ಮತ್ತು ತಾಳಕ್ಕಾಗಿ ಒಂದು ವಾದ್ಯ (ಸಾಮಾನ್ಯವಾಗಿ ಮೃದಂಗ) ಸಾಮಾನ್ಯ. ಕಛೇರಿಗಳು ಸಾಮಾನ್ಯವಾಗಿ ಗಣಪತಿ ಸ್ತೋತ್ರದೊಂದಿಗೆ ಆರಂಭವಾಗುತ್ತವೆ. ನಂತರ ಬೇರೆ ಬೇರೆ ರಾಗಗಳಲ್ಲಿ ಅನೇಕ ಕೃತಿಗಳನ್ನು ಹಾಡಲಾಗುತ್ತದೆ. ಕಛೇರಿಯ ಅಂತ್ಯದಲ್ಲಿ ಹಗುರವಾದ ಕೃತಿಗಳು (ತಿಲ್ಲಾನ) ಅಥವಾ ಮಂಗಳವನ್ನು ಹಾಡಲಾಗುತ್ತದೆ. ವಾದ್ಯಗಳು ಶ್ರುತಿಗಾಗಿ ತಂಬೂರಿ ಉಪಯೋಗವಾಗುತ್ತದೆ. ಪ್ರಧಾನ ವಾದ್ಯ ಅಥವಾ ಪಕ್ಕವಾದ್ಯಗಳಿಗೆ ಸಾಮಾನ್ಯವಾಗಿ ಉಪಯೋಗಗೊಳ್ಳುವ ವಾದ್ಯಗಳು ವೀಣೆ, ವಯೊಲಿನ್ (ಪಿಟೀಲು). ಕೆಲವೊಮ್ಮೆ ಕೊಳಲು ಉಪಯೋಗಗೊಳ್ಳುತ್ತದೆ. ತಾಳಕ್ಕಾಗಿ ಉಪಯೋಗಿಸಲ್ಪಡುವ ವಾದ್ಯಗಳಲ್ಲಿ ಪ್ರಮುಖವಾದವು ಮೃದಂಗ ಮತ್ತು ಘಟ. ಇತ್ತೀಚಿನ ವರ್ಷಗಳಲ್ಲಿ ಮ್ಯಾಂಡೊಲಿನ್, ವಿಚಿತ್ರವೀಣೆ, ಸ್ಯಾಕ್ಸೋಫೋನ್ ಮೊದಲಾದ ವಾದ್ಯಗಳು ಜನಪ್ರಿಯಗೊಳಿಸಲ್ಪಟ್ಟಿವೆ. ಕರ್ನಾಟಕ ಸಂಗೀತದಲ್ಲಿ ಹಾಡುಗಾರಿಕೆಯ ಪ್ರಾಧಾನ್ಯ ಹೆಚ್ಚು. ವಾದ್ಯಗಳು ಸಹ ಹಾಡುಗಾರಿಕೆಯನ್ನೇ ಅನುಕರಿಸುತ್ತವೆ. ಇತ್ತೀಚೆಗೆ ಶುದ್ಧ ವಾದ್ಯ ಸಂಗೀತವೂ ಸ್ವಲ್ಪ ಮಟ್ಟಿಗೆ ಜನಪ್ರಿಯವಾಗಿದೆ. ವ್ಯವಸ್ಥೆ ಬಹುಪಾಲು ಕರ್ನಾಟಕ ಸಂಗೀತದ ಕಛೇರಿಗಳು ಈ ಕೆಳಗಿನ ವ್ಯವಸ್ಥೆಯನ್ನು ಅನುಸರಿಸುತ್ತವೆ. ವರ್ಣ - ಕಛೇರಿ ಯಾವುದಾದರೂ ವರ್ಣದ ಹಾಡುಗಾರಿಕೆಯಿಂದ (ವಾದ್ಯಗಳ ಸಂದರ್ಭದಲ್ಲಿ ನುಡಿಸುವಿಕೆಯಿಂದ) ಅರಂಭವಾಗುತ್ತದೆ. ಸಾಮಾನ್ಯವಾಗಿ ಯಾವುದಾದರೂ ಸಂಪೂರ್ಣ ರಾಗದ ವರ್ಣವನ್ನು ಆರಿಸಲಾಗುತ್ತದೆ. ಕಛೇರಿಯ ಆರಂಭವಾದದ್ದರಿಂದ ಕಲ್ಯಾಣಿ, ಧೀರ ಶಂಕರಾಭರಣ ಮೊದಲಾದ ರಾಗಗಳು ಇಲ್ಲಿ ಸಾಮಾನ್ಯ. ವರ್ಣ ಸುಮಾರು ೬-೧೨ ನಿಮಿಷಗಳಷ್ಟು ಕಾಲ ನಡೆಯುತ್ತದೆ. ಕೀರ್ತನೆಗಳು - ವರ್ಣದ ನಂತರ ವಿವಿಧ ರಾಗಗಳಲ್ಲಿ ಕೀರ್ತನೆಗಳನ್ನು ಹಾಡಲಾಗುತ್ತದೆ. ಕೆಲವೊಮ್ಮೆ ಕೀರ್ತನೆಯ ಮೊದಲು ರಾಗ ಆಲಾಪನೆ ಮತ್ತು ಕೊನೆಯಲ್ಲಿ ಕಲ್ಪನಾ ಸ್ವರ ಬರುವುದುಂಟು. ತನಿ - ಇಂದಿನ ಬಹುಪಾಲು ಕಛೇರಿಗಳಲ್ಲಿ ಒಂದು "ತನಿ ಆವರ್ತನೆ" ನಡೆಯುತ್ತದೆ. ಹಾಡುಗಾರರು ಮತ್ತು ವಯೊಲಿನ್ ನಡುವೆ ಸ್ವರ ಕಲ್ಪನೆ, ನಿರವಲ್ ಮೊದಲಾದ ಹಂತಗಳ ನಂತರ ತಾಳ ವಾದ್ಯಗಳಾದ ಮೃದಂಗ, ಘಟ ಅಥವ ಖಂಜಿರ ಮೊದಲು ಬೆರೆ ಬೆರೆಯಾಗಿ ನಂತರ ಒಟ್ಟುಗೂಡಿ ನುಡಿಸುವ ಹಂತ ತನಿ ಆವರ್ತನೆ. ರಾಗ ತಾನ ಪಲ್ಲವಿ - ಅನುಭವಿ ಸಂಗೀತಗಾರರು ಅನೇಕ ಕೀರ್ತನೆಗಳ ಬದಲು ರಾಗ ತಾನ ಪಲ್ಲವಿಯನ್ನು ನಡೆಸಬಹುದು. ದೇವರ ನಾಮಗಳು - ಹಾಡುವ ಪದ್ದತಿ ಇದೆ. ತಿಲ್ಲಾನ - ಕೆಲವೊಮ್ಮೆ ಕೊನೆಯಭಾಗದಲ್ಲಿ ತಿಲ್ಲಾನ ಹಾಡುತ್ತಾರೆ. ಮಂಗಳ - ಕಛೇರಿಯ ಕೊನೆಯಲ್ಲಿ ಹಾಡಲಾಗುವ (ಅಥವಾ ನುಡಿಸಲಾಗುವ) ಮಂಗಳ ಸಾಮಾನ್ಯವಾಗಿ ಸೌರಾಷ್ಟ್ರ ಅಥವಾ ಮಧ್ಯಮಾವತಿ ರಾಗದಲ್ಲಿರುತ್ತದೆ. ಪ್ರಸಿದ್ಧ ಸಂಗೀತಗಾರರು ಪಿತಾಮಹ ಶ್ರೀ ಪುರಂದರದಾಸರು ಕರ್ನಾಟಕ ಸಂಗೀತದ ಪಿತಾಮಹರು. ಮುಂದೆ ತ್ಯಾಗರಾಜರಂಥ ಸಂಗೀತಗಾರರಿಗೆ ಸ್ಫೂರ್ತಿ ತಂದ ಪುರಂದರದಾಸರು ತಾಳ ವ್ಯವಸ್ಥೆಯ ಮೂಲಭೂತ ಸಿದ್ಧಾಂತವನ್ನೂ ಪ್ರತಿಪಾದಿಸಿದರು. ತ್ರಿಮೂರ್ತಿ ಶ್ರೀ ತ್ಯಾಗರಾಜರು (೧೭೫೯-೧೮೪೭), ಮುತ್ತುಸ್ವಾಮಿ ದೀಕ್ಷಿತರು (೧೭೭೬-೧೮೨೭) ಮತ್ತು ಶ್ಯಾಮಾ ಶಾಸ್ತ್ರಿಗಳು(೧೭೬೨-೧೮೨೭) - ಈ ಮೂವರು ವಾಗ್ಗೇಯಕಾರರನ್ನು ಕರ್ನಾಟಕ ಸಂಗೀತದ ತ್ರಿಮೂರ್ತಿಗಳು ಎಂದು ಪರಿಗಣಿಸಲಾಗುತ್ತದೆ. ಆಧುನಿಕ ಹಾಡುಗಾರರು ಆಧುನಿಕ ಹಾಡುಗಾರರಲ್ಲಿ ಪ್ರಸಿದ್ಧರಾದ ಕೆಲವರೆಂದರೆ ಎಂ.ಎಸ್.ಸುಬ್ಬುಲಕ್ಷ್ಮಿ, ಡಾ.ಬಾಲಮುರಳಿಕೃಷ್ಣ, ಡಿ.ಕೆ ಪಟ್ಟಮ್ಮಾಳ್, ಕೆ.ಜೆ.ಯೇಸುದಾಸ್, ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಮೊದಲಾದವರು. ಇನ್ನೂ ಇತ್ತೀಚಿನ ಆಧುನಿಕ ಹಾಡುಗಾರರಲ್ಲಿ ಪ್ರಸಿದ್ಧರಾದವರು ಅರುಣಾ ಸಾಯಿರಾಮ್,ಸುಧಾ ರಘುನಾಥನ್,ಬಾಂಬೆ ಜಯಶ್ರೀ, ಸಂಜಯ್ ಮೊದಲಾದವರು. ವಾದ್ಯ ವಾದ್ಯಗಳಲ್ಲಿ ಪರಿಣತಿ ಪಡೆದ ಆಧುನಿಕ ಸಂಗೀತಗಾರರಲ್ಲಿ ಮೈಸೂರು ದೊರೆಸ್ವಾಮಿ ಅಯ್ಯಂಗಾರ್ (ವೀಣೆ), ಟಿ. ಚೌಡಯ್ಯ, ಲಾಲ್‍ಗುಡಿ ಜಯರಾಮನ್, ಕೋಲಾರದ ಕೊಳ್ಳೆಗಾಲ ಗೊಪಾಲಕೃಷ್ಣ (ವಯೊಲಿನ್), ಕದ್ರಿ ಗೋಪಾಲನಾಥ್ (ಸ್ಯಾಕ್ಸೊಫೋನ್) ಮೊದಲಾದವರು ಪ್ರಸಿದ್ಧರು. ಇನ್ನೂ ಇತ್ತೀಚೆಗೆ ರವಿಕಿರಣ್ (ಚಿತ್ರವೀಣೆ), ಯು ಶ್ರೀನಿವಾಸ್ (ಮ್ಯಾಂಡೊಲಿನ್) ಮೊದಲಾದವರು ಹೆಸರು ಪಡೆದಿದ್ದಾರೆ. ಬಾಹ್ಯ ಸಂಪರ್ಕಗಳು ಕರ್ನಾಟಕ ಸಂಗೀತವನ್ನು ಕೇಳಿರಿ (ಹಾಡುಗಾರಿಕೆ) ಕರ್ನಾಟಕ ಸಂಗೀತವನ್ನು ಕೇಳಿರಿ (ವಾದ್ಯ) ಸಂಗೀತ, ಸಂಗೀತಗಾರ ಸಂಜಯ್ ಸುಬ್ರಹ್ಮಣ್ಯಮ್ ಅವರ ತಾಣ, ಕರ್ನಾಟಕ ಸಂಗೀತ ಪದ್ಧತಿಯ ಬಗ್ಗೆ ಮತ್ತು ಸಂಗೀತಗಾರರ ಬಗ್ಗೆ ಮಾಹಿತಿ Carnatica, ಕರ್ನಾಟಕ ಸಂಗೀತದ ಬಗ್ಗೆ ಮಾಹಿತಿ, ಆಡಿಯೋ ಸಿಡಿಗಳು ಕರ್ನಾಟಕ ಸಂಗೀತ portal ಸಂಸ್ಕೃತಿ ಸಂಗೀತ ಕರ್ನಾಟಕ ಸಂಗೀತ
1158
https://kn.wikipedia.org/wiki/%E0%B2%A6%E0%B3%8A%E0%B2%B0%E0%B3%86%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF%20%E0%B2%85%E0%B2%AF%E0%B3%8D%E0%B2%AF%E0%B2%82%E0%B2%97%E0%B2%BE%E0%B2%B0%E0%B3%8D
ದೊರೆಸ್ವಾಮಿ ಅಯ್ಯಂಗಾರ್
ಮೈಸೂರು ದೊರೆಸ್ವಾಮಿ ಅಯ್ಯಂಗಾರ್ (ಅಕ್ಟೋಬರ್ ೨೪, ೧೯೨೦ - ಅಕ್ಟೋಬರ್, ೧೯೯೭) ಕರ್ನಾಟಕ ಶಾಸ್ತ್ರೀಯ ಸಂಗೀತದ ಪ್ರಸಿದ್ಧ ವೈಣಿಕರು. ಅವರು ವೀಣಾ ದೊರೆಸ್ವಾಮಿ ಅಯ್ಯಂಗಾರ್ ಎಂದೇ ಪ್ರಸಿದ್ದರಾಗಿದ್ದು ಪದ್ಮವಿಭೂಷಣ ಗೌರವ ಸಮ್ಮಾನಿತರು. ಜೀವನ ಅಕ್ಟೋಬರ್ ೨೪, ೧೯೨೦ ದೊರೆಸ್ವಾಮಿ ಅಯ್ಯಂಗಾರ್ ಅವರು ಹುಟ್ಟಿದ ದಿನ. ಮೈಸೂರಿನ ವೀಣೆಗೆ ಕರ್ನಾಟಕ ಸಂಗೀತದಲ್ಲಿ ಮಹತ್ವದ ಸ್ಥಾನವಿದ್ದು, ಹಲವಾರು ಪರಿಣಿತರನ್ನು ಸಂಗೀತ ಲೋಕಕ್ಕೆ ನೀಡಿದೆ. ಮೈಸೂರು ಅರಸರು ಸಂಗೀತಕ್ಕೆ ಮಹತ್ವದ ಪೋಷಕರಾಗಿದ್ದು, ೧೬೪೫-೧೭೦೪ರ ಅವಧಿಯಲ್ಲಿ ಜೀವಿಸಿದ್ದ ಚಿಕ್ಕದೆವರಾಯರು ಸ್ವಯಂ ಪ್ರಸಿದ್ಧ ವೀಣಾಪಟುಗಳಾಗಿದ್ದರಂತೆ. ನಾಲ್ಮಡಿ ಕೃಷ್ಣರಾಜ ಒಡೆಯರ್ ಅವರು ಹಿಂದೂಸ್ಥಾನಿ ಮತ್ತು ಕರ್ನಾಟಕ ಸಂಗೀತಗಳೆರಡಕ್ಕೂ ಪ್ರೋತ್ಸಾಹವನ್ನು ನೀಡಿ ಅನೇಕ ಸಂಗೀತ ವಿದ್ವಾಂಸರಿಗೆ ಆಶ್ರಯಧಾತರಾಗಿದ್ದರು. ಸಣ್ಣ ವಯಸ್ಸಿನಲ್ಲಿಯೇ ಅಯ್ಯಂಗಾರ್ ಅವರಿಗೆ ಮಹಾರಾಜರಿಂದ ಪ್ರೋತ್ಸಾಹ ದೊರೆಯಿತು. ತಮ್ಮ ಆರನೇ ವಯಸ್ಸಿನಲ್ಲೇ ಪ್ರಬುದ್ಧ ವೀಣಾವಾದಕರಾಗಿದ್ದ ದೊರೆಸ್ವಾಮಿ ಅಯ್ಯಂಗಾರ್ ಅವರು ತಮ್ಮ ಹತ್ತನೇ ವಯಸ್ಸಿನಲ್ಲೇ ಮಹಾಜರೆದುರು ವೀಣೆ ನುಡಿಸಿ 50 ಬೆಳ್ಳಿರೂಪಾಯಿಗಳ ಬಹುಮಾನ ಪಡೆದಿದ್ದರು. ದೊರೆಸ್ವಾಮಿ ಅಯ್ಯಂಗಾರ್ಯರು ವೀಣೆ ಮತ್ತು ಕೊಳಲುಗಳೆರಡರಲ್ಲೂ ಪರಿಣತಿ ಹೊಂದಿದ್ದು, ರಾಜ ಕುಟುಂಬದವರಿಗೆ ವೀಣೆ ಮತ್ತು ಕೊಳಲುವಾದನದ ಪಾಠ ಹೇಳುತ್ತಿದ್ದರು. ಅವರ ಕಿರಿಯ ಸಹೋದರ ದೇಶಿಕಾಚಾರ್ ಅವರು ಪ್ರಸಿದ್ಧ ಕೊಳಲುವಾದಕರು. ದೊರೆಸ್ವಾಮಿ ಅವರು, ತಂದೆ ವೆಂಕಟೇಶ ಅಯ್ಯಂಗಾರ್ ಅವರಿಂದಲೇ ಸಂಗೀತ ಪಾಠ ಪಡೆದು ಬಹಳ ಬೇಗ ತಂದೆಯವರನ್ನೇ ಮೀರಿಸಿದರು. ತಮ್ಮ ಮಗನಲ್ಲಿರುವ ಸಂಗೀತ ಬೆಳವಣಿಗೆಯನ್ನು ಗಮನಿಸಿದ ವೆಂಕಟೇಶ ಅಯ್ಯಂಗಾರ್ಯರು ಅವನಿಗೆ ಪ್ರಸಿದ್ಧ ವೈಣಿಕ ವಿದ್ವಾಂಸ ವೀಣೆ ಶೇಷಣ್ಣನವರ ನೇರ ಶಿಷ್ಯರಾದ ವೆಂಕಟಗಿರಿಯಪ್ಪನವರ ಬಳಿ ಶಿಕ್ಷಣಕ್ಕೆ ಏರ್ಪಾಡು ಮಾಡಿದರು. ದೊರೆಸ್ವಾಮಿ ಅವರು ಹದಿನೈದು ವರ್ಷಗಳ ಕಾಲ ವೆಂಕಟಗಿರಿಯಪ್ಪನವರಿಂದ ಕಠಿಣ ಪರಿಶ್ರಮದ ಶಿಕ್ಷಣ ಪಡೆಯುವುದರ ಜೊತೆಗೆ ಗುರುಗಳ ಸಂಗೀತ ಕಚೇರಿಗಳಲ್ಲಿ ಜೊತೆಗಾರರಾಗಿರುತ್ತಿದ್ದರು. ಕಿರಿಯ ವಯಸ್ಸಿನಲ್ಲೇ ಆಸ್ಥಾನ ವಿದ್ವಾನ್ ಹದಿನಾರನೆಯ ವಯಸ್ಸಿನಲ್ಲಿಯೇ ಆಸ್ಥಾನ ವಿದ್ವಾನ್ ಸ್ಥಾನ ದೊರೆಸ್ವಾಮಿ ಅಯ್ಯಂಗಾರ್ಯರಿಗೆ ಸಂದಿತ್ತು. ಅವರಿಗೆ ಅಂದಿನ ಮಾಸಿಕ ಸಂಬಳ ರೂ. ೭೫. ಅದು ತಮಗೆ ಸಂತೃಪ್ತಿ ಮತ್ತು ಸಂತೋಷವನ್ನು ಕೊಡುತ್ತಿತ್ತು ಎಂದು ದೊರೆಸ್ವಾಮಿ ಅಯ್ಯಂಗಾರ್ ಅವರು ಹೇಳುತ್ತಿದ್ದರು. ಆಕಾಶವಾಣಿಯಲ್ಲಿ ಮೈಸೂರು ರೇಡಿಯೋ ನಿಲಯವು ಆಕಾಶವಾಣಿಯೊಂದಿಗೆ ವಿಲೀನವಾದಾಗ ದೊರೆಸ್ವಾಮಿ ಅಯ್ಯಂಗಾರ್ ಅವರಿಗೆ ಆಕಾಶವಾಣಿಯಲ್ಲಿ ಕಾರ್ಯನಿರ್ವಾಹಕರಾಗುವ ಅವಕಾಶ ಒದಗಿ ಬಂತು. ಇಪ್ಪತ್ತೊಂದು ವರ್ಷಗಳ ಕಾಲ ಆಕಾಶವಾಣಿಯಲ್ಲಿ ದುಡಿದ ಅಯ್ಯಂಗಾರ್ಯರು ರೇಡಿಯೋದಲ್ಲಿ ಸಂಗೀತ ಕಾರ್ಯಕ್ರಮಗಳಿಗೆ ಜನಪ್ರಿಯತೆ ತರುವಲ್ಲಿ ಅಪಾರವಾದ ಶ್ರಮವಹಿಸಿದವರು. ಹಲವಾರು ಉತ್ತಮ ಸಾಹಿತ್ಯಗಳಿಗೆ, ವಾದ್ಯ ಗೋಷ್ಠಿಗಳಿಗೆ ಮತ್ತು ಸಂಗೀತ ವೈವಿಧ್ಯಗಳಿಗೆ ಸಂಗೀತ ಸಂಯೋಜಕರಾಗಿ ಅಯ್ಯಂಗಾರ್ಯರು ಮಹತ್ವದ ಕಾರ್ಯ ನಿರ್ವಹಿಸಿದರು. ಅವರ ಈ ಶ್ರದ್ಧೆಯ ದುಡಿತದಿಂದ ಹಲವಾರು ಸಂಗೀತ ಪ್ರತಿಭೆಗಳು ಬೆಳಕಿಗೆ ಬರುವಂತಾಯಿತು ವಿಶ್ವದಾದ್ಯಂತ ಕಾರ್ಯಕ್ರಮಗಳು ದೊರೆಸ್ವಾಮಿ ಅಯ್ಯಂಗಾರ್ ಅವರು ತಮ್ಮ ಸಂಗೀತ ಜೀವನದಲ್ಲಿ ವೈಯಕ್ತಿಕವಾಗಿ ಕಾರ್ಯಕ್ರಮಗಳನ್ನು ನೀಡುವುದರ ಜೊತೆ ಪಿಟೀಲು ಚೌಡಯ್ಯ, ಲಾಲ್ಗುಡಿ ಜಯರಾಮನ್ ಮೊದಲಾದ ಸಂಗೀತಗಾರರ ಜೊತೆಯಲ್ಲಿ ವಾದ್ಯ ಕಛೇರಿಗಳಲ್ಲಿ ಭಾಗವಹಿಸಿದ್ದರು. ಭಾರತದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ಕಛೇರಿ ನೀಡಿ ಪ್ರಸಿದ್ಧರಾದ ಇವರು ಹಿಂದೂಸ್ಥಾನಿ ಸಂಗೀತದ ದಿಗ್ಗಜರಾದ ಉಸ್ತಾದ್ ಅಲಿ ಅಕ್ಬರ್ ಖಾನ್ ಅವರೊಂದಿಗೆ ಹಲವಾರು ಜುಗಲ್ ಬಂದಿ ಕಾರ್ಯಕ್ರಮಗಳನ್ನು ನೀಡಿದ್ದರು. ಚಲನಚಿತ್ರ ಸಂಗೀತ ‘ಸುಬ್ಬಾಶಾಸ್ತ್ರಿ’ ಚಲನ ಚಿತ್ರಕ್ಕೆ ದೊರೆಸ್ವಾಮಿ ಅಯ್ಯಂಗಾರ್ ಅವರು ನೀಡಿದ ಸಂಗೀತ ಸಂಯೋಜನೆಯನ್ನು ಕನ್ನಡದ ಸಿನಿಮಾ ಪ್ರೇಕ್ಷಕರು ಮರೆಯುವಂತೆಯೇ ಇಲ್ಲ. ಡಾ. ಎ. ಎನ್. ಮೂರ್ತಿರಾಯರ ‘ಆಷಾಢಭೂತಿ’ ನಾಟಕವನ್ನು ಆಧರಿಸಿ ಎಂ.ವಿ ಕೃಷ್ಣಸ್ವಾಮಿ ಅವರು ನಿರ್ದೇಶಿಸಿದ ಈ ಚಲನಚಿತ್ರಕ್ಕೆ ದೊರೆಸ್ವಾಮಿ ಅಯ್ಯಂಗಾರ್ ಅವರು ಬಾಲಮುರಳಿಕೃಷ್ಣ, ಶ್ರೀರಂಗಂ ಗೋಪಾಲರತ್ನಂ ಅಂತಹ ಶ್ರೇಷ್ಠ ಗಾಯಕರನ್ನು ಬಳಸಿ ಸಂಯೋಜಿಸಿದ ಹಾಡುಗಳು ಕನ್ನಡ ಚಿತ್ರರಂಗದ ಅತ್ಯುತ್ಕೃಷ್ಟ ಚಲನಚಿತ್ರ ಗೀತೆಗಳ ಸಾಲಿನಲ್ಲಿ ನಿರಂತರವಾಗಿ ವಿರಾಜಿಸುವಂತದ್ದಾಗಿದೆ. ಸಾಹಿತ್ಯ ಲೋಕದಲ್ಲಿ ಕವಿ ಪು. ತಿ. ನ ಅವರ ಆತ್ಮೀಯರಾಗಿದ್ದ ದೊರೆಸ್ವಾಮಿ ಅಯ್ಯಂಗಾರ್ ಅವರು ಕರ್ನಾಟಕ ಸರ್ಕಾರವು ಪು. ತಿ. ನ ಅವರ ಹೆಸರಿನಲ್ಲಿ ಸ್ಥಾಪಿಸಿದ್ದ ಟ್ರಸ್ಟಿನ ಅಧ್ಯಕ್ಷರಾಗಿದ್ದರು. ದೊರೆಸ್ವಾಮಿ ಅಯ್ಯಂಗಾರ್ ಅವರು ಅತ್ಯುತ್ತಮ ಬರಹಗಾರರೂ ಆಗಿದ್ದು ‘ವೀಣೆಯ ನೆರಳಿನಲ್ಲಿ’ ಎಂಬುದು ಅವರ ಪ್ರಸಿದ್ಧ ಕೃತಿಯಾಗಿದೆ. ದೊರೆಸ್ವಾಮಿ ಅಯ್ಯಂಗಾರ್ಯರ ಲಲಿತ ಬರಹಗಳು ನಾಡಿನಾದ್ಯಂತ ಮೆಚ್ಚುಗೆ ಗಳಿಸಿದ್ದವು. ಅಂದಿನ ತಲೆಮಾರಿನ ಸಂಗೀತಜ್ಞರ ಕುರಿತು ಅವರಲ್ಲಿ ಜ್ಞಾನ ಭಂಡಾರವೇ ತುಂಬಿತ್ತು. ಸಾಮಾನ್ಯರಲ್ಲಿ ಸಾಮಾನ್ಯ ದೊರೆಸ್ವಾಮಿ ಅಯ್ಯಂಗಾರ್ ಅವರು ಅತ್ಯಂತ ಸಾಮಾನ್ಯರಲ್ಲಿ ಸಾಮಾನ್ಯರಂತೆ ತಮ್ಮ ಮಲ್ಲೇಶ್ವರದ ಮನೆಯಲ್ಲಿ ಜೀವನ ನಡೆಸಿದರು. ಪ್ರಶಸ್ತಿ ಗೌರವಗಳು ಇವರಿಗೆ ಮೈಸೂರು ವಿಶ್ವವಿದ್ಯಾಲಯವು ೧೯೭೫ರ ವರ್ಷದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿತು. ಭಾರತ ಸರ್ಕಾರವು ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತು. ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಸಹಾ ದೊರೆಸ್ವಾಮಿ ಅಯ್ಯಂಗಾರ್ ಅವರು ಕಾರ್ಯ ನಿರ್ವಹಿಸಿದ್ದರು. ೧೯೮೫ರ ವರ್ಷದಲ್ಲಿ ಅಖಿಲ ಭಾರತ ಕರ್ನಾಟಕ ಸಂಗೀತ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಪುತ್ರ ಬಾಲಕೃಷ್ಣ ದೊರೆಸ್ವಾಮಿ ಅಯ್ಯಂಗಾರ್ ಅವರ ಪುತ್ರ ವಿದ್ವಾನ್ ಡಿ. ಬಾಲಕ್ರಿಷ್ಣ ಅವರೂ ವೀಣಾವಾದನದಲ್ಲಿ ಪ್ರಖ್ಯಾತರಾಗಿದ್ದಾರೆ. ವಿದಾಯ ೧೯೯೭ರ ಅಕ್ಟೋಬರ್ ಮಾಸದಲ್ಲಿ ಡಾ. ದೊರೆಸ್ವಾಮಿ ಅಯ್ಯಂಗಾರ್ಯರು ನಿಧನರಾದರು. ಅವರ ಹೆಸರಿನಲ್ಲಿ ಅಕಾಡೆಮಿಯನ್ನು ತೆರೆಯಲಾಗಿದ್ದು, ಮೈಸೂರು ಶೈಲಿಯ ವೀಣಾವಾದನವನ್ನು ಉಳಿಸಿ ಬೆಳೆಸುವ ಕೆಲಸ ನಡೆಸಲಾಗುತ್ತಿದೆ. ಮಾಹಿತಿ ಆಧಾರ ಜ್ಯೋತ್ಸ್ನಾ ಕಾಮತ್ ಅವರ ದೊರೆಸ್ವಾಮಿ ಅಯ್ಯಂಗಾರ್ ಅವರ ಲೇಖನ ವೀಣಾ ವಾದಕರು ಕರ್ನಾಟಕ ಶಾಸ್ತ್ರೀಯ ಸಂಗೀತ ಭಾರತದ ಸಂಗೀತಗಾರರು ಶಾಸ್ತ್ರೀಯ ಸಂಗೀತಗಾರರು ಸಂಗೀತಗಾರರು ವಾದ್ಯ ಸಂಗೀತಗಾರರು
1162
https://kn.wikipedia.org/wiki/%E0%B2%95%E0%B2%A6%E0%B3%8D%E0%B2%B0%E0%B2%BF%20%E0%B2%97%E0%B3%8B%E0%B2%AA%E0%B2%BE%E0%B2%B2%E0%B2%A8%E0%B2%BE%E0%B2%A5%E0%B3%8D
ಕದ್ರಿ ಗೋಪಾಲನಾಥ್
ಕದ್ರಿ ಗೋಪಾಲನಾಥ್ ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕರು. ಸ್ಯಾಕ್ಸೊಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದವರಾಗಿದ್ದಾರೆ. ಜೀವನ ಗೋಪಾಲನಾಥರು ೧೯೪೯ ಡಿಸೆಂಬರ್ ೬ ರಂದು ದಕ್ಷಿಣ ಕನ್ನಡ ಜಿಲ್ಲೆಯ ಸಜಿಪಮೂಡ ಊರಿನಲ್ಲಿ ಜನಿಸಿದರು. ತಂದೆ ತನಿಯಪ್ಪನವರು ನಾಗಸ್ವರ ವಿದ್ವಾಂಸರಾಗಿದ್ದರಿಂದ ಸಂಗೀತವೆಂಬುದು ಗೋಪಾಲನಾಥರ ದಿನಚರಿಯಾಗಿತ್ತು. ತಾಯಿ ನಾಗಮ್ಮ. ಕದ್ರಿ ಗೋಪಾಲನಾಥರು ಬಾಲ್ಯದಿಂದಲೇ ತಂದೆಯವರಿಂದ ನಾಗಸ್ವರ ಶಿಕ್ಷಣವನ್ನು ಪಡೆದರು. ಆದರೆ ಅವರ ಬದುಕಿಗೆ ತೆರೆದದ್ದು ಮತ್ತೊಂದು ಬಾಗಿಲು. ಒಮ್ಮೆ ಅವರು ಮೈಸೂರು ಅರಮನೆಯ ಬ್ಯಾಂಡ್ ಸೆಟ್ನೊಂದಿಗೆ ಸ್ಯಾಕ್ಸಫೋನ್ ವಾದನವನ್ನು ಕೇಳಿ ಆ ವಾದ್ಯದಲ್ಲಿರುವ ವೈವಿದ್ಯತೆಗೆ ಮನಸೋತು ಸ್ಯಾಕ್ಸಫೋನಿನಲ್ಲಿಯೇ ಪ್ರಾವೀಣ್ಯತೆ ಸಂಪಾದಿಸಬೇಕೆಂಬ ದೃಢ ನಿರ್ಧಾರ ಕೈಗೊಂಡರು. ಇದಕ್ಕಾಗಿ ಅವರು ನಡೆಸಿದ ನಿರಂತರ ತಪಸ್ಸು ಇಪ್ಪತ್ತು ವರ್ಷಗಳದ್ದು. ಮಂಗಳೂರಿನ ಕಲಾನಿಕೇತನದ ಎನ್. ಗೋಪಾಲಕೃಷ್ಣ ಅಯ್ಯರ್ ಅವರಿಂದ ಅವರು ಸಂಗೀತ ಕಲಿತರು. ಮುಂದೆ ಕದ್ರಿ ಗೋಪಾಲನಾಥರು ಮದ್ರಾಸಿನ ಟಿ. ಎನ್. ಗೋಪಾಲಕೃಷ್ಣನ್ ಅವರ ಸಂಪರ್ಕಕ್ಕೆ ಬಂದರು. ಗೋಪಾಲನಾಥರಲ್ಲಿದ್ದ ಅಗಾಧ ಪ್ರತಿಭೆಯನ್ನು ಗಮನಿಸಿದ ಗೋಪಾಲಕೃಷ್ಣನ್ ಅವರು ಕದ್ರಿ ಗೋಪಾಲನಾಥರು ಒಬ್ಬ ಅಂತರರಾಷ್ಟ್ರೀಯ ಪ್ರತಿಭೆಯಾಗಿ ರೂಪುಗೊಳ್ಳಲು ನೀರೆರೆದರು. ಟಿ. ಎನ್. ಗೋಪಾಲಕೃಷ್ಣ ಅವರಲ್ಲಿ ಸ್ಯಾಕ್ಸಫೋನ್ ವಾದನ ಕಲಿರು ಅತ್ಯಂತ ಶ್ರದ್ಧೆಯಿಂದ ಸಂಗೀತವನ್ನು ಅಭ್ಯಾಸ ಮಾಡಿದ ಗೋಪಾಲನಾಥರು ಕರ್ನಾಟಕ ಸಂಗೀತ ಮತ್ತು ಸ್ಯಾಕ್ಸೊಫೋನ್ ವಾದ್ಯಗಳೆರಡರಲ್ಲೂ ಪ್ರಭುತ್ವ ಸಾಧಿಸಿದರು. ಗೋಪಾಲನಾಥರು ತಮ್ಮ ಗುರುಗಳ ಅನುಗ್ರಹವೇ ತಮ್ಮ ಎಲ್ಲಾ ಸಾಧನೆಗಳ ಹಿಂದಿರುವ ಶಕ್ತಿ ಎಂದು ಭಕ್ತಿಯಿಂದ ಸ್ಮರಿಸುತ್ತಾರೆ. ವಿಶ್ವದಾದ್ಯಂತ ಕಛೇರಿಗಳು ೧೯೭೮ರಲ್ಲಿ ಮಂಗಳೂರು ಆಕಾಶವಾಣಿಯಲ್ಲಿ ತಮ್ಮ ಮೊದಲ ಸಂಗೀತ ಕಛೇರಿ ನೀಡಿದರು. ಗೋಪಾಲನಾಥರ ಪ್ರಥಮ ಕಾರ್ಯಕ್ರಮ ಮದ್ರಾಸಿನ ಚೆಂಬೈ ಮೆಮೋರಿಯಲ್ ಟ್ರಸ್ಟ್ನಲ್ಲಿ ನಡೆಯಿತು. ಅದು ಅವರಿಗೆ ಎಲ್ಲೆಡೆಯಿಂದ ಪ್ರಸಿದ್ಧಿ ತಂದಿತು. ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರೆಂದು ಪರಿಗಣಿತರಾದ ಗೋಪಾಲನಾಥರ ಕಚೇರಿಗಳು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿಯೇ ಅಲ್ಲದೆ ಉತ್ತರ ಭಾರತದ ಪ್ರತಿಷ್ಟಿತ ಉತ್ಸವ- ವೇದಿಕೆಗಳಲ್ಲಿ, ಬಿಬಿಸಿಯ ಆಹ್ವಾನದ ಮೇರೆಗೆ ರಾಯಲ್ ಆಲ್ಬರ್ಟ್ ಹಾಲ್‌ನಲ್ಲಿ, ಫ್ರಾಗ್ ಜಾಸ್ ಫೆಸ್ಟಿವಲ್, ಬರ್ಲಿನ್ ಸಂಗೀತೋತ್ಸವ, ಮೆಕ್ಸಿಕೋದ ಸೆರ್ವಾಂಟಿನೊ ಉತ್ಸವ, ಲಂಡನ್‌ನ ಪ್ರೊಮೆನಾಡೊ, ಪ್ಯಾರಿಸ್‌ನ ಹೈಲ್ ಫೆಸ್ಟಿವಲ್ ಮುಂತಾದ ವಿಶ್ವ ಉತ್ಸವ-ವೇದಿಕೆಗಳಲ್ಲಿ ಕದ್ರಿಯವರ ಸ್ಯಾಕ್ಸೋಫೋನ್ ಮೊಳಗಿದೆ. ಯೂರೋಪ್, ಸ್ವಿಜರ್‌ಲ್ಯಾಂಡ್, ಯುನೈಟೆಡ್ ಕಿಂಗ್ಡಂ, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಜರ್ಮನಿ, ಸಿಂಗಪೂರ್, ಬಹರೇನ್, ಕ್ವೆಟಾರ್, ಮಸ್ಕಟ್, ಮಲೇಷಿಯಾ, ಶ್ರೀಲಂಕಾ ಹೀಗೆ ಅವರು ವಿಶ್ವದಾದ್ಯಂತ ಯಶಸ್ವಿ ಕಚೇರಿಗಳನ್ನು ನಿರಂತರವಾಗಿ ನಡೆಸಿಕೊಡುತ್ತಾಬಂದಿದ್ದಾರೆ. ಸ್ಯಾಕ್ಸೊಫೋನಿಗೆ ಮತ್ತೊಂದು ಹೆಸರು ಕದ್ರಿಯವರ ವಾದನ ಸದಾ ಕಾವಿನಿಂದ ಕೂಡಿರುವಂಥದು. ಅವರ ಕಛೇರಿ ಮೊದಲಿನಿಂದ ಕೊನೆಯವರೆಗೂ ರಂಜನೀಯ; ಸುನಾದದ ಅಲೆ! ಚೇತೋಹಾರಿ ವಿನಿಕೆ. ತನಿಯಾಗಿ ಕರ್ನಾಟಕ ಸಂಗೀತ, ಹಿಂದುಸ್ತಾನಿ ಕಲಾವಿದರೊಂದಿಗೆ ಜುಗಲ್‌ಬಂದಿ, ಪಾಶ್ಚಾತ್ಯ ವಾದ್ಯಗಳೊಂದಿಗೆ ಜಾಸ್, ಫ್ಯೂಷನ್ ಹೀಗೆ ವೈವಿಧ್ಯಪೂರ್ಣ ಕಾರ್ಯಕ್ರಮಗಳನ್ನು ಅವರು ನೀಡುತ್ತಾ ಬಂದಿದ್ದಾರೆ. ಕಚೇರಿಗಳಲ್ಲಷ್ಟೇ ಆಲ್ಲದೆ, ಅನೇಕ ವೈಶಿಷ್ಟ್ಯಪೂರ್ಣ ಆಲ್ಬಂಗಳಲ್ಲಿ ಸಹಾ ಅವರ ಸಂಗೀತ ಶ್ರೋತೃ-ಅಭಿಮಾನಿಗಳನ್ನು ತಣಿಸುತ್ತಿದೆ. ಇಂದು ವಿದೇಶಿ ಮೂಲದ ವಾದ್ಯ ಸ್ಯಾಕ್ಸೋಫೋನ್‌ಗೆ ಶಾಸ್ತ್ರೀಯ ಸಂಗೀತದ ವೇದಿಕೆಯ ಮೇಲೆ ಒಂದು ಗೌರವಾನ್ವಿತ ಸ್ಥಾನ ದೊರಕಿರುವುದು ಅವರ ಪ್ರತಿಭೆ, ಪರಿಶ್ರಮಗಳಿಂದಲೇ. ಹಾಗಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತದ ನಿಟ್ಟಿನಲ್ಲಿ ಸ್ಯಾಕ್ಸೊಫೋನ್ಗೆ ಇನ್ನೊಂದು ಹೆಸರೇ ಕದ್ರಿ ಗೋಪಾಲನಾಥ್. ಭಾರತದಲ್ಲಿ ಮತ್ತು ಹೊರಗೆ ಅನೇಕ 'ಸಂಗೀತ-ಕಛೇರಿ'ಗಳನ್ನು ನಡೆಸುತ್ತಾ ಬಂದಿರುವ 'ಕದ್ರಿ ಗೋಪಾಲನಾಥ್' ಸ್ಯಾಕ್ಸೊಫೋನ್ ಚಕ್ರವರ್ತಿ ಎಂದೇ ಹೆಸರಾಗಿದ್ದಾರೆ. ಕಾರ್ಗಿಲ್ ಯುದ್ಧ ಸಂತ್ರಸ್ತರಿಗೆ ಕೊಡುಗೆ ಚೆನ್ನೈನ ನಾರದ ಗಾನಸಭಾದಲ್ಲಿ ೪00 ಮಂದಿ ಕಲಾವಿದರೊಡನೆ ನಡೆಸಿಕೊಟ್ಟ ಕಾರ್ಯಕ್ರಮದಿಂದ ಬಂದ ಲಕ್ಷಾಂತರ ಹಣವನ್ನು ಕಾರ್ಗಿಲ್ ಯುದ್ಧ ನಿಧಿಗಾಗಿ ಗೋಪಾಲನಾಥರು ಸಮರ್ಪಿಸಿದವರು. ಪ್ರಶಸ್ತಿ ಗೌರವಗಳು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ - ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ರಾಜ್ಯೋತ್ಸವ ಪ್ರಶಸ್ತಿ ಬೆಂಗಳೂರು ವಿಶ್ವವಿದ್ಯಾಲಯದ ಮತ್ತು ವಿವಿಧ ವಿಶ್ವವಿದ್ಯಾಲಯಗಳಿಂದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ನಿಧನ ಅಕ್ಟೋಬರ್ ೧೧ ೨೦೧೯ ರಂದು ಬೆಳಗಿನ ಜಾವ ೬೯ ನೆಯ ವಯಸ್ಸಿನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಲ್ಲೇಖಗಳು ಶಾಸ್ತ್ರೀಯ ಸಂಗೀತಗಾರರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಕರ್ನಾಟಕ ಸಂಗೀತಕಾರರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ೧೯೪೯ ಜನನ ೨೦೧೯ ನಿಧನ
1164
https://kn.wikipedia.org/wiki/%E0%B2%97%E0%B2%BF%E0%B2%B0%E0%B3%80%E0%B2%B6%E0%B3%8D%20%E0%B2%95%E0%B2%BE%E0%B2%B8%E0%B2%B0%E0%B2%B5%E0%B2%B3%E0%B3%8D%E0%B2%B3%E0%B2%BF
ಗಿರೀಶ್ ಕಾಸರವಳ್ಳಿ
ಗಿರೀಶ್ ಕಾಸರವಳ್ಳಿ,ಭಾರತದ ಅತ್ಯಂತ ಪ್ರತಿಭಾನ್ವಿತ ಚಲನಚಿತ್ರ ನಿರ್ದೇಶಕರಲ್ಲೊಬ್ಬರು.ಮಲೆನಾಡಿನ ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿ ತಾಲೂಕಿನ ಕೆಸಲೂರಿನಲ್ಲಿ ೧೯೫೦ರಲ್ಲಿ ಜನಿಸಿದ ಇವರು ಮಣಿಪಾಲದಲ್ಲಿ ಬಿ,ಫಾರ್ಮ್ ಪದವಿ ಮುಗಿಸಿ ಪುಣೆಯ ರಾಷ್ಟ್ರೀಯ ಚಲನಚಿತ್ರ ತರಬೇತಿ ಸಂಸ್ಥೆ ಯಲ್ಲಿ ನಿರ್ದೇಶನ ವಿಭಾಗದಲ್ಲಿ ಡಿಪ್ಲೊಮಾ ಪದವಿ ಗಳಿಸಿದರು. ಗಿರೀಶ್ ಕಾಸರವಳ್ಳಿಯವರು ತಮ್ಮ ೨೭ ವರ್ಷಗಳ ವೃತ್ತಿ ಜೀವನದಲ್ಲಿ ಕೇವಲ ೧೪ ಕನ್ನಡ ಚಿತ್ರಗಳನ್ನು ಮಾತ್ರ ನಿರ್ದೇಶಿಸಿದರೂ, ಹಲವಾರು ರಾಷ್ಟ್ರೀಯ ಹಾಗು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರ ಚಿತ್ರಗಳು ಅನೇಕ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿಯೂ ಸಹ ಪ್ರದರ್ಶಿತವಾಗಿದೆ. ಸಮಾನಾಂತರ ಚಿತ್ರ ಆಂದೋಲನದ ಬಾವುಟವನ್ನು ಹಾರಿಸುತ್ತ ಶ್ರೀಯುತರು ಜನಪ್ರಿಯ ಅಥವಾ ವಾಣಿಜ್ಯಮಯ ಚಿತ್ರಗಳಿಂದ ಮೊದಲಿನಿಂದಲು ದೂರ ಇದ್ದಾರೆ. ವೃತ್ತಿ ಜೀವನ ಪುಣೆಯಲ್ಲಿರುವ ಭಾರತೀಯ ದೂರದರ್ಶನ ಹಾಗು ಚಲನಚಿತ್ರ ಸಂಸ್ಥೆಯಿಂದ ಎಫ್ ಟಿ ಐ ಐ ಬಂಗಾರದ ಪದಕದೊಂದಿಗೆ ಪದವಿ ಪಡೆದ ಗಿರೀಶ್ ಕಾಸರವಳ್ಳಿಯವರು, ತಮ್ಮ ಪದವಿಪ್ರಾಪ್ತಿಗಾಗಿ ಮಾಡಿದ ಚಿತ್ರ ಅವಶೇಷಕ್ಕಾಗಿ ಸಣ್ಣ ಚಿತ್ರ ವಿಭಾಗದಲ್ಲಿ, ಭಾರತದ ರಾಷ್ಟ್ರಪತಿಗಳಿಂದ ರಜತ ಕಮಲ ಪ್ರಶಸ್ತಿಯನ್ನು ಪಡೆದರು. ೧೯೭೭ರಲ್ಲಿ ತಮ್ಮ ಪ್ರಥಮ ಚಲನಚಿತ್ರ ಘಟಶ್ರಾದ್ಧಕ್ಕಾಗಿ ಭಾರತದ ರಾಷ್ಟ್ರಪತಿಗಳಿಂದ ಸ್ವರ್ಣ ಕಮಲ ಪ್ರಶಸ್ತಿಯನ್ನು ಪಡೆದನಂತರ ಇನ್ನೂ ೩ ಸ್ವರ್ಣಕಮಲಗಳನ್ನು (ಒಟ್ಟಾರೆ ೪) ಪಡೆದು ಸತ್ಯಜಿತ್ ರೇ( ೬ ಸ್ವರ್ಣ ಕಮಲಗಳು)(ಮೃಣಾಲ್ ಸೇನ್ ಮತ್ತು ಕಾಸರವಳ್ಳಿ) ನಂತರ ನಾಲ್ಕು ಸ್ವರ್ಣ ಕಮಲಗಳನ್ನು ಪಡೆದವರಲ್ಲಿ ಒಬ್ಬರಾಗಿದ್ದಾರೆ. ಇವರು "ಘಟಶ್ರಾದ್ಧ" ನಿರ್ದೇಶಿಸಿದಾಗ ಇವರ ವಯಸ್ಸು ಕೇವಲ ೨೭.ಸ್ವರ್ಣ ಕಮಲ ಪುರಸ್ಕಾರ ಪಡೆದ ಕಿರಿಯ ನಿರ್ದೇಶಕರೆಂದು ಹೆಸರು ಪಡೆದರು."ಘಟಶ್ರಾದ್ಧ"ಕತೆಯನ್ನು ಆಧರಿಸಿ ಅರುಣ್ ಕೌಲ್ ನಿರ್ದೇಶನದಲ್ಲಿ "ದೀಕ್ಷಾ " ಎಂಬ ಹೆಸರಿನಲ್ಲಿ ಹಿಂದಿ ಚಿತ್ರವೊಂದು ತಯಾರಾಗಿದೆ. ಖಾಸಗೀ ಜೀವನ ಗಿರೀಶ್ ಕಾಸರವಳ್ಳಿಯವರ ಪತ್ನಿ ವೈಶಾಲಿ ಕಾಸರವಳ್ಳಿ ಕನ್ನಡ ಚಲನಚಿತ್ರ ನಟಿ ಹಾಗು ದೂರದರ್ಶನ ಧಾರಾವಾಹಿಗಳ ನಿರ್ದೇಶಕಿ. 'ನೀನಾಸಂ-ರಂಗಶಾಲೆ'ಯ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ಗಿರೀಶ್ ಕಾಸರವಳ್ಳಿಯವರ ಹತ್ತಿರದ ಸಂಬಂಧಿ. ಪ್ರಶಸ್ತಿಗಳು ದಕ್ಷಿಣ ಏಷ್ಯಾ ಫೆಡರೇಷನ್ ನ ಕ್ರಿಸ್ಟಲ್ ಗ್ಲೋಬ್ ಪ್ರಶಸ್ತಿ, ೨೦೦೯ ಪದ್ಮಶ್ರೀ, ೨೦೧೧ ಚಿತ್ರಗಳು ಇವರ "ಕನಸೆಂಬ ಕುದುರೆಯನೇರಿ" ಚಿತ್ರ ಅಮರೇಶ ನುಗಡೋಣಿ ಅವರ 'ಸವಾರಿ' ಸಣ್ಣಕಥೆಯನ್ನಾಧರಿಸಿದ ಚಿತ್ರ.೨೦೧೦ರ 57ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪ್ರಾದೇಶಿಕ ಚಿತ್ರ ವಿಭಾಗದಲ್ಲಿ 'ಕನಸೆಂಬ ಕುದುರೆಯನೇರಿ' ಚಿತ್ರ ರಜತ ಕಮಲ ಪ್ರಶಸ್ತಿಯನ್ನು ಬಾಚಿಕೊಂಡಿದೆ. 2010ನೇ ಸಾಲಿನ ರೋಮ್ ನ ಏಷ್ಯಾಲಿಕಾ ಚಿತ್ರೋತ್ಸವ, ಶ್ರೇಷ್ಠ ಏಷ್ಯನ್ ಚಿತ್ರ NETPAC ಅವಾರ್ಡ್ ಈ ಚಿತ್ರಕ್ಕೆ ಸಂದಿದೆ. ಇವರ ನಿರ್ದೇಶನದ "ಕೂರ್ಮಾವತಾರ" ಸಿನಿಮಾ ೨೦೧೨ರ ಸಾಲಿನ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಜತೆಗೆ ರಜತ ಕಮಲ ಪ್ರಶಸ್ತಿ ಪಡೆದುಕೊಂಡಿದೆ. ಉಲ್ಲೇಖ ನಿರ್ದೇಶಕರು ಕನ್ನಡ ಸಿನೆಮಾ ಕನ್ನಡ ಚಲನಚಿತ್ರ ನಿರ್ದೇಶಕರು ಕಿರುತೆರೆ ನಿರ್ದೇಶಕರು ರಾಷ್ತ್ರ_ಪ್ರಶಸ್ತಿ_ವಿಜೇತರು
1165
https://kn.wikipedia.org/wiki/%E0%B2%AD%E0%B3%80%E0%B2%AE%E0%B2%B8%E0%B3%87%E0%B2%A8%20%E0%B2%9C%E0%B3%8B%E0%B2%B7%E0%B2%BF
ಭೀಮಸೇನ ಜೋಷಿ
ಪಂಡಿತ ಭೀಮಸೇನ ಗುರುರಾಜ ಜೋಷಿ ಹಿಂದುಸ್ತಾನಿ ಸಂಗೀತ(ಜನನ: ಫೆಬ್ರವರಿ ೪, ೧೯೨೨-ಮರಣ:ಜನವರಿ ೨೪,೨೦೧೧ ) ಪದ್ಧತಿಯ ಅತಿ ಪ್ರಸಿದ್ಧ ಗಾಯಕರಲ್ಲಿ ಒಬ್ಬರು. ಇವರು ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಹಿಂದುಸ್ತಾನಿ ಸಂಗೀತ ಪದ್ಧತಿಯ ಗಾಯಕರು. 'ಬಹು-ದೊಡ್ಡ ಪರಿವಾರದಲ್ಲಿ ಜನನ' ಭೀಮಸೇನ ಜೋಷಿಯವರು, ೪, ಫೆಬ್ರವರಿ ,೧೯೨೨ ರಲ್ಲಿ, 'ರಥಸಪ್ತಮಿಯ ತಿಥಿ'ಯಂದು,(ಹಿಂದೆ ಧಾರವಾಡ ಜಿಲ್ಲೆ) ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಜನಿಸಿದರು. ಭೀಮಸೇನರ ಪೂರ್ವಜರು, ಮೂಲತಃ ಗದಗ ಜಿಲ್ಲೆಯ ’ಹೊಂಬಳ’ ಗ್ರಾಮದವರು. ಇವರ ತಂದೆ ಗುರುರಾಜ ಜೋಶಿ ಸಂಸ್ಕೃತದಲ್ಲಿ ಪಂಡಿತರು. ಗದುಗಿನ ಮುನಿಸಿಪಲ್ ಶಾಲೆಯಲ್ಲಿ ಶಿಕ್ಷಕರಾಗಿ, ಬಾಗಿಲುಕೋಟೆಯ ’ಬಸವೇಶ್ವರ ಹೈಸ್ಕೂಲ್’ನಲ್ಲಿ ಮುಖ್ಯೋಪಾಧ್ಯಾರರಾಗಿ ಸೇವೆಸಲ್ಲಿಸಿದ್ದರು. ಗುರುರಾಜರ ಇಬ್ಬರು ಪತ್ನಿಯರಲ್ಲಿ ಮೊದಲನೆಯವರಾದ ರಮಾಬಾಯಿಯವರಿಗೆ ೭ ಜನ ಮಕ್ಕಳು, ಹಾಗೂ ಎರಡನೆಯ ಪತ್ನಿ, ಗೋದುಬಾಯಿಯವರಿಗೆ ೯ ಜನ ಮಕ್ಕಳು. ಇಬ್ಬರನ್ನೂ 'ಗೋದುಬಾಯಿ'ಯೆಂದೇಸಂಬೋಧಿಸುತ್ತಿದ್ದರು. ಹಿರಿಯಮಗ,ಭೀಮಸೇನರ ನಂತರ, ಜನಿಸಿದವರು, ’ವನಮಾಲ’, ’ನಾರಾಯಣ’, ’ವೆಂಕಣ್ಣ’, ’ಹೇಮಕ್ಕ’, ’ಮದ್ದು’, ’ಮಾಧು’, ’ದಾಮೋದರ’, ’ಪರಿಮಳ’, ’ವಿಶಾಲ ’ಪ್ರಕಾಶ’,ಜಯತೀರ್ಥ, ಸುಶೀಲೇಂದ್ರ, ಪ್ರಾಣೇಶ, ವಾದಿರಾಜ, ಮತ್ತು ’ಜ್ಯೋತಿ.’ ’ಸುಶೀಲೆಂದ್ರ’, ಗದುಗಿನಲಿ ಅಭಿನಯ ರಂಗವೆಂಬ ಸಂಸ್ಥೆಯನ್ನು ಹುಟ್ಟುಹಾಕಿ ರಂಗಕಾರ್ಯಕ್ರಮವನ್ನು ನೀಡುತ್ತಿದ್ದಾರೆ. ’ಜಯತೀರ್ಥ’ ಸಹಿತ, ರಂಗಭೂಮಿಗೆ ತಮ್ಮನ್ನು ಅರ್ಪಿಸಿಕೊಂಡು ಅದರಲ್ಲಿ ಕೃಷಿಮಾಡಿದರು. ಗುರುವಿಗಾಗಿ ಹುಡುಕಾಟ ಚಿಕ್ಕಂದಿನಲ್ಲಿ ಸೈಕಲ್ ಸವಾರಿ ಇವರ ನೆಚ್ಚಿನ ಹವ್ಯಾಸವಾಗಿತ್ತು. ಏನಾದರೂ ತರಲು ಬಝಾರಿಗೆ ಕಳಿಸಿದರೆ, ಗಂಟೆಗಟ್ಟಲೆ ಮನೆಗೆ ಬರುತ್ತಿರಲಿಲ್ಲ. ಚಿಕ್ಕಂದಿನಿಂದಲೀ ಅತಿಯಾದ ಸಂಗೀತದ ಗೀಳಿದ್ದ ಜೋಷಿಯವರು ತಮ್ಮ ಹನ್ನೊಂದನೆಯ ವಯಸ್ಸಿನಲ್ಲಿಯೇ ಮನೆ ಬಿಟ್ಟು ಮುಂಬಯಿಗೆ ಹೋದರು.ಮುಂಬಯಿತಲುಪಿದ ಬಾಲಕ ಜೋಷಿಯವರಲ್ಲಿ ಹಣಕಾಸು ಇರಲಿಲ್ಲ. ಪುಟ್ಟ ಭೀಮಸೇನರು ಕೂಲಿ ನಾಲಿ ಮಾಡಿ, ಪುಟ್ಪಾತ್ ನಲ್ಲಿ ಮಲಗಿ ದಿನ ಕಳೆದಿದ್ದರು.ಹಸಿವು ನೀರಡಿಕೆ ಅವರನ್ನು ಮತ್ತೆ ತನ್ನ ಹುಟ್ಟೂರಿಗೆ ಬರುವಂತೆ ಮಾಡಿತು.ಸಂಗೀತ ಕಲಿಯಲೇಬೇಕೆಂಬ ಆಸೆ ಮತ್ತು ಹಠ ಅವರನ್ನು ಎರಡನೆ ಬಾರಿಗೆ ಮನೆ ಬಿಡುವಂತೆ ಮಾಡಿ ಗ್ವಾಲಿಯರ್ ಗೆ ಬರುವಂತೆ ಮಾಡಿತು.ಅಲ್ಲಿ ಗಾಯಕ ವಿನಾಯಕ್ ರಾವ್ ಪಟವರ್ಧನ್ ಇವರ ನಿರ್ದೇಶನದಂತೆ ಸವಾಯಿ ಗಂಧರ್ವರಲ್ಲಿ ಸಂಗೀತ ಸಾಧನೆಗೆ ಮರಳಿ ಬಂದರು ಧಾರವಾಡ ಜಿಲ್ಲೆಗೆ ಹಿಂದಿರುಗಿ ಕುಂದಗೋಳದ ಪ್ರಸಿದ್ಧ ಗಾಯಕರಾದ ಸವಾಯಿ ಗಂಧರ್ವರ ಅಪ್ಪಟ ಶಿಷ್ಯರಾದರು. ಹಿಂದುಸ್ತಾನಿ ಸಂಗೀತದ ಒಂದು ಪದ್ಧತಿಯಾದ ಕಿರಾಣಾ ಘರಾನಾದಲ್ಲಿ ಪರಿಣತರಾದ ಭೀಮಸೇನ ಜೋಷಿಯವರು ಕಳೆದ ಐದು ದಶಕಗಳ ಕಾಲ ಕಛೇರಿಗಳನ್ನು ನಡೆಸುತ್ತಾ ಬಂದಿದ್ದಾರೆ. 'ಗುರುರಾಜ ಜೋಶಿ ಪರಿವಾರದ ಸದಸ್ಯರು' ಪಂ.'ಭೀಮ್ ಸೆನ್ ಜೋಶಿ'ಯವರ ತಮ್ಮನ ಮಕ್ಕಳಲ್ಲೊಬ್ಬರು, 'ಭಾರತೀಯ ಕ್ರಿಕೆಟ್ ತಂಡದ ಸದಸ್ಯ'ರಲ್ಲೊಬ್ಬರಾದ ’ಸುನಿಲ್ ಜೊಶಿ’, ಮತ್ತು ’ಅನಿರುದ್ಧ ಜೋಶಿ, ಕಿರಿಯರ ಕ್ರಿಕೆಟ್ ತಂಡದ ಆಟಗಾರರು, ಚಿಕ್ಕಪ್ಪ, ’ಗೋವಿಂದಾಚಾರ್ಯ’ರು, ’ಜಡಭರತ’ ಎಂಬ ಕಾವ್ಯನಾಮದಿಂದ, ಹೆಸರಾಗಿದ್ದಾರೆ. ಇವರು ಸುಪ್ರಸಿದ್ಧ ಲೇಖಕರು ಮತ್ತು ನಾಟಕಕಾರರು, ’ಮನೋಹರ ಗ್ರಂಥಮಾಲೆ’ಯೆಂಬ ಪ್ರಕಾಶನ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಒಟ್ಟಾರೆ ಜೋಶಿಮನೆತನ ಸಂಗೀತ, ಸಾಹಿತ್ಯ, ಮತ್ತು ಕ್ರೀಡೆಗಳಿಗೆ ಹೆಸರುವಾಸಿಯಾಗಿದೆ. ಅಜ್ಜ ಕೀರ್ತನಕಾರರು. ಮೊಮ್ಮಗ, 'ಭೀಮಸೇನ', ಭಜನಾಮೇಳದವರೊಡನೆ ಸೇರಿಕೊಂಡು ದಾಸರ ಪದಗಳನ್ನು ಕೇಳುತ್ತಾ, ಹಾಡುತ್ತಾ ಮೈಮರೆಯುತ್ತಿದ್ದರು. ಹೀಗೆ ಮುಂದುವರೆದು 'ದಾಸವಾಣಿ-ಶಾಸ್ತ್ರೀಯ ಸಂಗೀತವಲಯ'ದಲ್ಲಿ ಅಪ್ರತಿಮ ಸಾಧನೆಮಾಡಿದರು; ಸಂಗೀತವನ್ನೂ ಬೆಳೆಸಿದರು. ಭೀಮಸೇನ ಜೋಷಿಯವರ ಪರಿವಾರ ಸನ್,೧೯೪೪ ರಲ್ಲಿ, ಪಂಡಿತ್‌ಜೀಯವರ ಪ್ರಥಮ ಪತ್ನಿ, ಸುನಂದಾರವರ ಜೊತೆ ವಿವಾಹದಿಂದ ನಾಲ್ಕು ಮಕ್ಕಳು ಜನಿಸಿದರು. ಅವರೇ, ರಾಘವೇಂದ್ರ, ಉಷಾ, ಸುಮಂಗಲ, ಹಾಗೂ ಕಿರಿಯ ಮಗ ಆನಂದ. ಸುನಂದಾರವರ ನಿಧನಬಳಿಕ, ೨ನೇ ವಿವಾಹ,ವತ್ಸಲಾ ರವರೊಡನೆ ನಡೆದು, ಅವರಿಗೆ ಮೂರು ಮಕ್ಕಳು ಜನಿಸಿದರು; ಅವರೇ, ಜಯಂತ, ಶುಭದಾ ಹಾಗೂ ಶ್ರೀನಿವಾಸ. ತಂದೆಯ ಪರಮ ಶಿಷ್ಯನಾದ 'ಶ್ರೀನಿವಾಸ', ಈಗ ಪ್ರಬುದ್ಧ ಗಾಯಕರಾಗಿದ್ದಾರೆ. ಗದಗದೊಂದಿಗೆ ಅವಿನಾಭಾವ ಸಂಬಂಧ ಗದುಗಿನ ’ಖಡಕ್ ರೊಟ್ಟಿ’ ಮತ್ತು ಝುಣಕ ಬಲುಪ್ರೀತಿ. ತಮ್ಮ ಊರಿನ ಜನತೆಗೆ ಅನೇಕ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿ ರಸದೌತಣನೀಡಿದ್ದರು. ೧೯೮೩ ರಲ್ಲಿ, ’ವೆಂಕಟೇಶ ಚಿತ್ರಮಂದಿರ’ದಲ್ಲಿ, ’ಹತ್ತಿಕಾಳ್ ಕೂಟ’ದಲ್ಲಿ, ೧೯೮೫-೮೬ ರಲ್ಲಿ ’ಕಾಟನ್ ಮಾರ್ಕೆಟ್’ ನಲ್ಲಿ, ೧೯೯೨ ರಲ್ಲಿ, ’ಅಭಿನಯರಂಗ ವಿದ್ಯಾದಾನ ಸಮಿತಿ ಹೈಸ್ಕೂಲ್’ ಅವರಣದಲ್ಲಿ, ’ಕರ್ನಾಟಕ ಚಿತ್ರಮಂದಿರ’ದಲ್ಲಿ. ಅದರಲ್ಲಿ ಶೇಖರವಾದ ಹಣದಲ್ಲಿ ನಗರದ ವಿವಿಧ ಶಾಲೆಗಳ ಕೊಠಡಿ ನಿರ್ಮಾಣ ಕಾರ್ಯಗಳಿಗೆ ಮತ್ತು ದೇವಾಲಯಕ್ಕೆ ದೇಣಿಗೆ ನೀಡಿದ್ದರು. ಹಿಂದೂಸ್ತಾನಿ ಸಂಗೀತ ಕ್ಷೇತ್ರದಲ್ಲಿ ದಿಗ್ಗಜರಾದರು ಕೊಲ್ಕತ್ತಾಕ್ಕೆ ಅವರು ವರ್ಷದಲ್ಲಿ ಸುಮಾರು ೨೦ ಬಾರಿಯಾದರೂ ಹೋಗಿಬರುತ್ತಿದ್ದರು. ಕೊಲ್ಕತ್ತಾದಲ್ಲಿನ ಹಲವಾರು ಹಿಂದೂಸ್ತಾನೀ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಒಂದು ಪ್ರತಿಷ್ಠೆಯ ಸಂಕೇತವಾಗಿತ್ತು. ಭೀಮಸೇನರಿಗೆ ಅಲ್ಲಿಂದ ತಪ್ಪದೆ ಆಮಂತ್ರಣ ಬರುತ್ತಿತ್ತು. ಹಾಗೆಯೇ ಆ ನಗರದಲ್ಲಿ ಹಲವಾರು ಸಂಗೀತ ಸಮ್ಮೇಳನಗಳು ವರ್ಷಪೂರ್ತಿ ಆಯೋಜಿತಗೊಳ್ಳುತ್ತಿದ್ದವು. ಅವುಗಳಲ್ಲಿ ಪ್ರಮುಖವಾದವುಗಳೆಂದರೆ, 'ಆಲ್ ಬೆಂಗಾಲ್ ಮ್ಯೂಸಿಕ್ ಕಾನ್ಫರೆನ್ಸ್', 'ತಾನ್ಸೇನ್ ಮ್ಯೂಸಿಕ್ ಕಾನ್ಪರೆನ್ಸ್', 'ಡೋವರ್ ಲೇನ್ ಮ್ಯೂಸಿಕ್ ಕಾನ್ಪರೆನ್ಸ್', ಹಿಂದುಸ್ತಾನಿ ಸಂಗೀತದ ಖಯಾಲ್ ಕೃತಿಗಳ ಹಾಡುಗಾರಿಕೆಗೆ ಜೋಷಿಯವರು ಪ್ರಸಿದ್ಧರು.ಕನ್ನಡ ಭಾಷೆಯ ದಾಸಪದವಾದ ಭಾಗ್ಯದ ಲಕ್ಷ್ಮಿ ಬಾರಮ್ಮ ಭೀಮಸೇನ ಜೋಷಿಯವರ ಹೆಸರಿನೊಂದಿಗೆ ಐಕ್ಯವಾಗುವಷ್ಟು ಪ್ರಸಿದ್ಧವಾಗಿದೆ. ಕನ್ನಡದಲ್ಲಿ ಭೀಮಸೇನ್ ಜೋಷಿಯವರ ಮುಖ್ಯ ಆಲ್ಬಮ್ ಗಳೆಂದರೆ ದಾಸವಾಣಿ ಮತ್ತು ಎನ್ನ ಪಾಲಿಸೊ ಹಾಗೆಯೇ ಹಿಂದಿ ಭಜನೆಗಳು, ಮರಾಠಿ ಅಭಂಗ ಮತ್ತು ನಾಟ್ಯಗೀತೆಗಳನ್ನು ಸಹ ಬಹಳಷ್ಟು ಹಾಡಿದ್ದಾರೆ. ಪಂಡಿತ್ ಜಿಯವರ ಸ್ವಭಾವ ಭೀಮಸೇನರು,ಸ್ವಭಾವತಃ ಮಹಾಮೌನಿಗಳು. ಅವರಿಂದ ಯಾವ ಪ್ರಶ್ನೆಗಳಿಗೂ ಉತ್ತರಗಳನ್ನು ನಿರೀಕ್ಷಿಸುವುದು ದುಸ್ಸಾಧ್ಯವಾಗಿತ್ತು. ಆದರೆ ಅವರ ವಾಚಾಳಿತನವನ್ನು ಶ್ರೋತೃಗಳು ಅವರು ಪ್ರಸ್ತುತಪಡಿಸುತ್ತಿದ್ದ,'ಬೃಂದಾವನ ಸಾರಂಗದಲ್ಲೋ,' ಭೀಮ ಪಲಾಸಿನಲ್ಲೋ',ಅಥವಾ ಮತ್ಯಾವುದೋ ಮುದಕೊಡುವ ರಾಗಗಳಲ್ಲಿ ಕಂಡುಕೊಳ್ಳುತ್ತಿದ್ದರು. ಅಸ್ಮಿತೆ ಅವರಲ್ಲಿ ನಿರಂತರವಾಗಿ ಹರಿಯುವ ತೊರೆಯಾಗಿತ್ತು. ಅವರ ಮೈಮನಗಳಲ್ಲಿ ಸಂಗೀತ ಉಕ್ಕಿಹರಿಯುತ್ತಿತ್ತು. ಯವತ್ತೂ ಅವರ ಮನೋಲೋಕದಲ್ಲೆಲ್ಲಾ ಆವರಿಸಿದ್ದು,'ಸಂಗೀತ'; 'ಕೇವಲ ಸಂಗೀತ,' ಹಾಗೂ ಅಪಾರ ಗುರುಭಕ್ತಿ,ಮಾತ್ರ. 'ನಾದಪುತ್ರ ಹುಟ್ಟಿದ,' ಗುರುರಾಜರು ಬರೆದ ಪುಸ್ತಕ ಭೀಮಸೇನರಬಗ್ಗೆ ಅವರ ತಂದೆ, ಗುರುರಾಜರು ಬರೆದ ಅಪರೂಪದ ಪುಸ್ತಕ, ಭೀಮಸೇನ ಜೋಷಿಯವರ ಬಾಲ್ಯದ, ಮತ್ತು ಅವರ ಸಂಗೀತದ ಹುಚ್ಚಿನ ಹತ್ತು-ಹಲವು ಮುಖಗಳನ್ನು ಪರಿಚಯಿಸುವ ಒಂದು ಸುಂದರ ಪುಸ್ತಕ. ಭೀಮಸೇನರ ಸಂಗೀತ-ಕಲೋಪಾಸನೆಗೆ ತಾವೇ ಅಡ್ಡಿಬಂದ ಸಂದರ್ಭದಲ್ಲಿ ವಿಧಿ, ಹೇಗೆ ಅವರ ನಿರ್ಧಾರಗಳನ್ನು ಬದಲಾಯಿಸಿ, ಅವರ ಮಗನನ್ನು 'ಭಾರತದ ಮಹಾನ್ ಗಾಯಕ'ನಾಗುವ ಅವಕಾಶವನ್ನು ತಂದೊಡ್ಡಿತು, ಎನ್ನುವ ವಿಚಾರ, ಅವರನ್ನು ದಿಗ್ಭ್ರಮೆಗೊಳಿಸುತ್ತದೆ. ಭೀಮಸೇನರ ಸಂಗೀತದ, ಧ್ವನಿಸುರಳಿಗಳು ಭೀಮಸೇನ ಜೋಶಿಯವರ ಸಂಗೀತದ, ಧ್ವನಿಸುರಳಿಗಳು ಮತ್ತು ಧ್ವನಿಮುದ್ರಿಕೆಗಳು, ಪ್ರತಿಯೊಬ್ಬರ ಮನೆ-ಮನವನ್ನು ತಲುಪಿವೆ. ಸಂಗೀತದಲ್ಲಿ ’ಕಲಾಶ್ರೀ' ರಾಗವನ್ನು ರಚಿಸಿದ ಅವರು ಮರಾಠಿ ಅಭಂಗ, ನಾಟ್ಯ ಸಂಗೀತ, ಹಿಂದಿ ಭಜನ್, ಕನ್ನಡದಲ್ಲಿ ದೇವರನಾಮ ಗಳನ್ನು ಹಾಡಿ, ಹಲವು ಚಲನಚಿತ್ರಗಳಿಗೂ ತಮ್ಮ ಕಂಠದಾನಮಾಡಿದ್ದಾರೆ. ಇವರ 'ಸಂತವಾಣಿ ಕಾರ್ಯಕ್ರಮ' ಅತ್ಯಂತ ಜನಪ್ರಿಯತೆಯನ್ನು ಪಡೆದಿದೆ. ಪುಣೆಯ ವಾಸಿ ಪುಣೆಯಲ್ಲಿ ವಾಸಿಸುವ ಭೀಮಸೇನ ಜೋಷಿ, ತಮ್ಮ ಗುರುಗಳ ನೆನಪಿನಲ್ಲಿ ೧೯೫೨ರಿಂದ ಪ್ರತಿ ವರ್ಷವೂ ಅಲ್ಲಿ "ಸವಾಯಿ ಗಂಧರ್ವ ಸಂಗೀತ ಮಹೋತ್ಸವ"ವನ್ನು ನಡೆಸುತ್ತಾ ಬ೦ದಿದ್ದಾರೆ. ಹುಬ್ಬಳ್ಳಿಯ ಹಾನಗಲ್ ಮ್ಯೂಸಿಕ್ ಸಂಸ್ಥೆ, ೧೨, ಅಕ್ಟೋಬರ್, ೨೦೦೭ ರಂದು, ಪಂ. ಭೀಮಸೇನ ಜೋಷಿಯವರಿಗೆ ಪುಣೆಯಲ್ಲಿ, ಡಾ. ಗಂಗೂಬಾಯಿ ಹಾನಗಲ್ ರವರ ಅಮೃತಹಸ್ತದಿಂದ, "ಸಂಗೀತಕಲಾನಿಧಿ"ಯೆಂಬ ಪ್ರಶಸ್ತಿಯನ್ನು ಕೊಟ್ಟು ಸನ್ಮಾನಿಸಿತು. . ಕಾರನ್ನು ವೇಗವಾಗಿ ಓಡಿಸುವ ಖಯಾಲಿ ಇವರಿಗಿತ್ತು. ಪ್ರಮುಖ ಶಿಷ್ಯರು ಪಂಡಿತ್‌ಜೀಯವರ ಶಿಷ್ಯತ್ವ ಪಡೆದವರಲ್ಲಿ, ಮಾಧವ ಗುಡಿ, ಶ್ರೀಕಾಂತ್ ದೇಶಪಾಂಡೆ, ವಿನಾಯಕ ತೊರವಿ' ಉಪೇಂದ್ರ ಭಟ್' 'ಶ್ರೀನಿವಾಸ ಜೋಶಿ, ಸ೦ಜೀವ ಜಹಗೀರದಾರ, ರಾಜೇಂದ್ರ ಕಂದಲ್ಗಾವ್ಕರ್,ಆನಂದ ಭಾಟೆ, ವಿನಾಯಕ್.ಪಿ.ಪ್ರಭು, ರಾಮಕೃಷ್ಣ ಪಟವರ್ಧನ್, ಶ್ರೀಪತಿ ಪಾಡಿಗಾರ, ಪಳಯಾರ ವರಾಜ್, ರಶೀದ ಖಾನ್, ಅಶುತೋಷ ಮುಖರ್ಜಿ ಮುಂತಾದವರು ಮುಖ್ಯರು.. ಮರಣ ದಿನಾಂಕ ೨೪-೧-೨೦೧೧ 'ಪೂನಾದ ಆಸ್ಪತ್ರೆ'ಯಲ್ಲಿ ೮೯ರ ಇಳಿವಸ್ಸಿನ 'ಭೀಮಸೇನ್ ಜೋಶಿ' ಕೊನೆಯುಸಿರೆಳೆದರು. ಜೀವನದ ಮಹತ್ವದ ಘಟನೆಗಳು ೧೯೨೨, ಫೆಬ್ರವರಿ,೪-ತಾಯಿ ರಮಾಬಾಯಿ ಅಕ್ಕನ ಮನೆ ’ರೋಣ’ದಲ್ಲಿ ಜನನ. ೧೯೩೧-ಗದುಗಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜವಹರಲಾಲ್ ನೆಹರೂ ಎದುರು ’ವಂದೇ ಮಾತರಂ ಗಾಯನ’ ೧೯೩೩-ಮನೆ ಬಿಟ್ಟು ಹೋಗಿದ್ದು, ಬಿಜಾಪುರದಿಂದ ಹಿಂದಿರುಗಿ ಬಂದದ್ದು(ಎರಡೂವರೆ ತಿಂಗಳುಗಳ ನಂತರ) ಮತ್ತೆ ಮನೆ ಬಿಟ್ಟದ್ದು. ೧೯೩೬-' ಪುಣೆ, ಮುಂಬಯಿ,ಗ್ವಾಲಿಯರ್, ಕೊಲ್ಕತ್ತಾ, ಜಲಂಧರ್, ಮುಂತಾದಕಡೆ ಸಂಗೀತಾಭ್ಯಾಸಕ್ಕಾಗಿ ಅಲೆದಾಟ. ೧೯೩೮ ರಿಂದ ೧೯೪೨ -ಕುಂದಗೋಳದ ಸವಾಯಿ ಗಂಧರ್ವರ ಮನೆಯಲ್ಲಿ ಗುರುಕುಲ ಪದ್ಧತಿಯಲ್ಲಿ ಶಿಕ್ಷಣ ೧೯೪೧-ಸವಾಯಿ ಗಂಧರ್ವರಿಂದ "ಗಂಡಾಬಂಧನ". ೧೯೪೧-೪೨-ಲಖನೌ ಆಕಾಶವಾಣಿ ಕೇಂದ್ರ'ದಲ್ಲಿ ನೌಕರಿ. ೧೯೪೩-'ಮುಂಬಯಿ ಮತ್ತು 'ನಿಜಾಮ ರೇಡಿಯೊ'ದೊಡನೆ ಹಾಡಿನ ಒಪ್ಪಂದ. 'ಸುನಂದಾ ಕಟ್ಟಿ' ಯವರ ಜೊತೆ ಮೊದಲ ವಿವಾಹ ೧೯೪೬-'ಸವಾಯಿ ಗಂಧರ್ವರ ಷಷ್ಠ್ಯಬ್ಧ ಸಮಾರಂಭದ ನಿಮಿತ್ತ ಪುಣೆಯಲ್ಲಿ ಗಾಯನ. ೩ ನಿಮಿಷಗಳ ರಾಗ ಸಂಗೀತ ಕನ್ನಡ ಗೀತೆಗಳ ಧ್ವನಿಮುದ್ರಣ. ೧೯೪೮-ಮಂಗಳೂರಿನಲ್ಲಿ ಗಾಯನ. ಶ್ರೀಧರ ಸ್ವಾಮಿಗಳಆಶೀರ್ವಾದ ೧೯೪೮-೪೯- ಕೊಲ್ಕತ್ತಾದಲ್ಲಿ ಪ್ರಥಮಬಾರಿಗೆ ಗಾಯನ ೧೯೪೮-೫೦-ಕನ್ನಡ ಸಂಗೀತ ನಾಟಕಗಳಲ್ಲಿ ನಾಯಕನ ಪಾತ್ರ, ಯಶಸ್ವಿ ಪ್ರಯೋಗಗಳು ೧೯೫೧-'ವತ್ಸಲಾ ಮುಧೋಳ್ಕರ್'ರವರ ಜೊತೆ ಎರಡನೆಯ ಮದುವೆ ೧೯೫೩-'ಸವಾಯಿ ಗಂಧರ್ವರ ಮೊದಲನೇ ಪುಣ್ಯ ತಿಥಿ ನಿಮಿತ್ತ ಸಂಗೀತ ಕಾರ್ಯಕರ್ಮ' ೧೯೫೪- 'ಆಕಾಶವಾಣಿ ಪ್ರಥಮ ರಾಷ್ಟ್ರೀಯ ಸಂಗೀತ ಕಾರ್ಯಕ್ರಮ'. 'ರಾಮೇಶ್ವರ ಮಂದಿರ' 'ಪುಣೆಯ ಬ್ರಹ್ಮವೃಂದದಿಂದ ಪಂಡಿತ ಬಿರುದು'. ೧೯೬೦- 'ಪ್ರಥಮ ಎಲ್.ಪಿ. ಮುದ್ರಿಕೆ' ೧೯೬೨ 'ಉಸ್ತಾದ್ ಬಡೇಗುಲಾಂ ಆಲೀಖಾನ್ ಪ್ರಶಸ್ತಿ ೧೯೬೪-ಗಾಯನಾಚಾರ್ಯ’ಅಖಿಲಭಾರತೀಯ ಪ್ರಶಸ್ತಿ. ಆಫ್ಘಾನೀಸ್ಥಾನಕ್ಕೆ ಪ್ರಥಮ ವಿದೇಶ ಯಾತ್ರೆ.ಭಾರತದ ಸಂಸ್ಕೃತಿಕ ತಂಡವಾಗದೇ ಹೋದರೂ ಅಲ್ಲಿಯ ರಾಜನ ವಿಶೇಷ ಆಮಂತ್ರಣವೂ ಇತ್ತು. ಗಂಧರ್ವ ಮಹಾವಿದ್ಯಾಲಯದಿಂದ ಪ್ರಶಸ್ತಿ. ೧೯೭೦-’ಸ್ವರ ಭಾಸ್ಕರ ಪ್ರಶಸ್ತಿ'’ ೧೯೭೨-'ಶ್ರೀ.ರಾಘವೇಂದ್ರ ಸ್ವಾಮಿ ಪೀಠದಿಂದ ಸಂಗೀತ ರತ್ನ ಗೌರವ', ಭಾರತ ಸರ್ಕಾರದ 'ಪದ್ಮಶ್ರೀ' ಗೌರವಕ್ಕೆ ಭಾಜನ, ಕರ್ನಾಟಕ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಪ್ರಥಮ 'ಸಂತವಾಣಿ ಕಾರ್ಯಕ್ರಮ' ೧೯೭೪ 'ಮಿಯಾತಾನ್ ಸೇನ್ ಪ್ರಶಸ್ತಿ', ಜಯಪುರದ ಗಂಧರ್ವ ಮಹಾವಿದ್ಯಾಲಯದ ’ಸಂಗೀತಾಚಾರ್ಯ ಬಿರುದು’ ೧೯೭೫-'ನ್ಯಾಷನಲ್ ಫಿಲಂ ಫೆಸ್ಟಿವಲ್' ನಲ್ಲಿ 'ಸರ್ವೋತ್ತಮ ಪಾರ್ಷ್ವ ಗಾಯನ', ಮಹಾರಾಷ್ಟ್ರ ವಿಧಾನ ಪರಿಷತ್ ನಿಂದ ಸನ್ಮಾನ. 'ಶ್ರೀಕೋನಾ' ರವರಿಂದ 'ಸ್ಕೂಲ್ ಆಫ್ ಆನರ್ ಗೌರವ' ೧೯೭೬-ಶ್ರೀಮಾನ್ ಪ್ರಭಾಕರ್ ರಾವ್ ರವರಿಂದ ಸನ್ಮಾನ. ಗುಲ್ಬರ್ಗಾ ವಿದ್ಯಾಪೀಠದಿಂದ ಡಿ.ಲಿಟ್ ಪದವಿಪ್ರದಾನ. ೧೯೭೮-ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ,ಕೊಲ್ಕತ್ತದಿಂದ ದಕ್ಷಿಣ ಬಾರ್ತಾಸಂಸ್ಥೆಯಿಂದ ಗೌರವ. ೧೯೭೯-ಭಾರತ ಸರಕಾರದ ಪದ್ಮವಿಭೂಷಣ ಗೌರವ, ಕಾನ್ಪುರ ಮಹಾನಗರ ಪಾಲಿಕೆಇಂದ ಅಭಿನಂದನಾ ಪತ್ರ. ೧೯೯೦-ಮಹಾರಾಷ್ಟ್ರ ಸರಕಾರದಿಂದ ಗೌರವ ಪುರಸ್ಕಾರ' ೧೯೯೧-'ತಾನ್ಸೇನ್ ಪುರಸ್ಕಾರ'. 'ಸುನಂದಾ ಭೀಮಸೇನ್ ಜೋಷಿ' ಯವರ ನಿಧನ, ೧೯೯೨-'ದೀನಾನಾಥ್ ಮಂಗೆಶ್ಕರ್ ಪುರಸ್ಕಾರ' ೧೯೯೩-'ದೇಶಿಕೋತ್ತಮ ಪ್ರಶಸ್ತಿ' ೧೯೯೪-ಮಹಾರಾಷ್ಟ್ರದ ತಿಲಕ್ ವಿದ್ಯಾಪೀಠದಿಂದ ಡಿ.ಲಿಟ್ ಪದವಿ. ೧೯೯೬-ಪುಣೆ ಮಹಾನಗರ ಪಾಲಿಕೆಯಿಂದ ಸನ್ಮಾನ, ಪುಣ್ಯಭೂಷಣ ಪ್ರಶಸ್ತಿ ೧೯೯೭-’ಸ್ವರಾಧಿರಾಜ ಗ್ರಂಥದ ಬಿಡುಗಡೆ' ೧೯೯೯- ಭಾರತ ಸರಕಾರದಿಂದ ಪದ್ಮ ವಿಭೂಷಣ ಗೌರವ ೨೦೦೧-ಪುಣೆ ವಿಶ್ವ ವಿದ್ಯಾಲಯದಲ್ಲಿ 'ಭೀಮಸೇನ್ ಜೋಶಿ ಪೀಠ ಸ್ಥಾಪನೆ' ೨೦೦೨-ಮಹಾರಾಷ್ಟ್ರ ಸರಕಾರದ ಅತ್ಯುನ್ನತ ಪ್ರಶಸ್ತಿ ಮಹಾರಾಷ್ಟ್ರ ಭೂಷಣ ಗೌರವ, ಕೇರಳದ ಅತುನ್ನತ ಸ್ವಾತಿ ತಿರುನಾಳ ಪ್ರಶಸ್ತಿ ಪ್ರದಾನ , ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಗೌರವ ಡಿ.ಲಿಟ್ ಪ್ರಶಸ್ತಿ ಪ್ರದಾನ'. ಕರ್ನಾಟಕದ ಅತ್ಯುನ್ನತ ಪ್ರಶಸ್ತಿ,'ಕರ್ನಾಟಕ ರತ್ನ ಪ್ರದಾನ'. ೨೦೦೫ 'ವತ್ಸಲಾ ಜೋಶಿಯವರ ನಿಧನ'. ೨೦೦೭-'ಸ್ವಾಮಿ ಹರಿವಲ್ಲಭದಾಸ್ ಪುರಸ್ಕಾರ' ೨೦೦೮-ಭಾರತದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನ ಭಾಜನರಾದರು. ೨೦೦೯-ದೆಹಲಿ ಸರಕಾರದ, 'ಜೀವನ ಗೌರವ ಪುರಸ್ಕಾರ' ೨೦೧೦-'ರಾಮ ಸೇವಾ ಮಂಡಳಿ', ಬೆಂಗಳೂರು,ಇವರಿಂದ,'ಎಸ್.ವಿ.ನಾರಾಯಣ ಸ್ವಾಮಿ ರಾವ್, ರಾಷ್ಟ್ರೀಯ ಪುರಸ್ಕಾರ' ೨೦೧೧- ಪುಣೆಯ ಆಸ್ಪತ್ರೆಯಲ್ಲಿ ನಿಧನ ಉಲ್ಲೇಖಗಳು sankalp ’ಗಾನ ಸೂರ್ಯ ಅಸ್ತಂಗತ,’ 'ಕಾವೆಂಶ್ರೀ', 'ಸುಧಾ, ೧೦, ಫೆ, ೨೦೧೧, ಪು. ೪೦ ಭಾರತದ ಸಂಗೀತಗಾರರು ಶಾಸ್ತ್ರೀಯ ಸಂಗೀತಗಾರರು ಹಿಂದುಸ್ತಾನಿ ಸಂಗೀತ ಸಂಗೀತಗಾರರು ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಭಾರತ ರತ್ನ ಪುರಸ್ಕೃತರು ೧೯೨೨ ಜನನ ೨೦೧೧ ನಿಧನ
1169
https://kn.wikipedia.org/wiki/%E0%B2%95%E0%B2%A8%E0%B3%8D%E0%B2%A8%E0%B2%A1%20%E0%B2%B0%E0%B2%BE%E0%B2%9C%E0%B3%8D%E0%B2%AF%E0%B3%8B%E0%B2%A4%E0%B3%8D%E0%B2%B8%E0%B2%B5
ಕನ್ನಡ ರಾಜ್ಯೋತ್ಸವ
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಇತಿಹಾಸ ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು ೧೯೦೫ ರಲ್ಲಿ ಪ್ರಾರಂಭಿಸಿದರು. ೧೯೫೦ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು. ೧೯೫೬ ರ ನವೆಂಬರ್ ೧ ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು. ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು "ಮೈಸೂರು" ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ ೧, ೧೯೭೩ ರಂದು "ಕರ್ನಾಟಕ" ಎಂದು ಬದಲಾಯಿತು. ಈ ಸಂದರ್ಭದಲ್ಲಿ ದೇವರಾಜ ಅರಸ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕ ಏಕೀಕರಣದ ಮನ್ನಣೆ ಇತರ ವ್ಯಕ್ತಿಗಳಿಗೂ ಸೇರುತ್ತದೆ. ಅವರೆಂದರೆ ಅನಕೃ, ಕೆ. ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ನಮಗೆಲ್ಲಾ ತಿಳಿದಿರುವಂತೆ ಭಾರತ ಸ್ವಾತಂತ್ರ್ಯಗೊಂಡ ನಂತರ ಕನ್ನಡ ಭಾಷಿಕರಿರುವ ವಿವಿಧ ಪ್ರದೇಶಗಳನ್ನು ಒಂದುಗೂಡಿಸಿ “ಮೈಸೂರು ರಾಜ್ಯʼʼವನ್ನು ರಚಿಸಲಾಗಿತ್ತು. ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ (ಈಗಿನ ಕಲ್ಯಾಣ ಕರ್ನಾಟಕ) ಪ್ರದೇಶಗಳು ಈ ರಾಜ್ಯದಲ್ಲಿ ವಿಲೀನವಾಗಿದ್ದವು. ಆದರೆ ಈ ಪ್ರದೇಶದ ಜನರಿಗೆ ರಾಜ್ಯಕ್ಕೆ “ಮೈಸೂರು ರಾಜ್ಯʼʼ ಎಂದು ನಾಮಕರಣ ಮಾಡಿರುವುದು ಇಷ್ಟವಾಗಿರಲಿಲ್ಲ. ಈ ಹೆಸರಲ್ಲಿ ಬದಲಾವಣೆ ಮಾಡಬೇಕೆಂದು ಒತ್ತಾಯಿಸುತ್ತಿದ್ದರು. ಈ ಕುರಿತು ಆಗ ರಾಜ್ಯದಲ್ಲಿ ಸುದೀರ್ಘ ಚರ್ಚೆಯ ಬಳಿಕ ೧೯೭೩ರ ನವೆಂಬರ್ ೧ರಂದು ರಾಜ್ಯಕ್ಕೆ “ಕರ್ನಾಟಕʼʼವೆಂದು ಪುನರ್ ನಾಮಕರಣ ಮಾಡಲಾಯಿತು. ಆಗಿನ ಮುಖ್ಯಮಂತ್ರಿಯಾಗಿದ್ದ ದೇವರಾಜ್ ಅರಸು ಅವರು ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದರು. ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣ ಮಾಡಿದ ಶುಭದಿನದಂದು ರಾಜ್ಯವನ್ನು ಉದ್ದೇಶಿಸಿದ ಮಾತನಾಡಿದ ಅರಸರು ಈ ಬೆಳವಣಿಗೆಯನ್ನು ಹೀಗೆ ವಿವರಿಸಿದ್ದರು; ಕರ್ನಾಟಕದ ಏಕೀಕರಣದ ಹಂಬಲಕ್ಕೆ ಸ್ಫುಟವಾದ ರೂಪು ದೊರೆಕಿದ್ದು ೧೯೧೬ರಲ್ಲೇ. ಧಾರವಾಡದಲ್ಲಿ ಕರ್ನಾಟಕ ಸಭೆ ಸ್ಥಾಪನೆಯಾದಾಗ, ಏಕೀಕರಣ ಸಮ್ಮೇಳನವು ಧಾರವಾಡದಲ್ಲಿ ಮೊಟ್ಟ ಮೊದಲಿಗೆ ನಡೆಯಿತು. ೧೯೨೦ರಲ್ಲಿ ನಾಗಪುರ ಕಾಂಗ್ರೆಸ್ಸಿನ ಅಧಿವೇಶನದಲ್ಲಿ ಭಾಷಾವಾರು ಪ್ರಾಂತ್ಯರಚನೆ ಸ್ಪಷ್ಟವಾದ ರೂಪುರೇಷೆ ಪಡೆಯಿತು. ಆದರೆ ಕನ್ನಡಿಗರ ಕನಸು ನನಸಾಗಲು ಮುವತ್ತಾರು ವರ್ಷಗಳೇ ಬೇಕಾಯಿತು. ೧೯೫೬ರ ನವೆಂಬರ್ ಒಂದರಂದು ಕನ್ನಡನಾಡು ಉದಯಿಸಿತು. ಆದರೆ ಈ ನಾಡಿನ ಹಿರಿಮೆ, ಸಂಸ್ಕೃತಿ ಮತ್ತು ಒಗ್ಗಟ್ಟಿನ ಸಂಕೇತವಾದ ಹೆಸರು ಇರದೇ ಇದ್ದುದು ಜನಮನದ ಅಂತರಾಳವನ್ನು ಕಲಕಿತ್ತು. ಮತ್ತೆ ೧೭ ವರ್ಷಗಳ ನಂತರ ಕಾಲಮಾನ ಪರಿಸ್ಥಿತಿಗೆ ಅನುಗುಣವಾಗಿ ನಡೆದ ಪ್ರಾಮಾಣಿಕ ಪ್ರಯತ್ನದ ಫಲವಾಗಿ ಈಗ ಜನತೆಯ ಮಹತ್ವಾಕಾಂಕ್ಷೆ ಈಡೇರಿದೆ. ಹಲವಾರು ದಶಕಗಳ ಕಾಲ ನಾಡು-ನುಡಿಯ ಉತ್ಕಟ ಪ್ರೇಮಿಗಳ ತ್ಯಾಗ ಶ್ರಮದ ಸಾಕ್ಷಾತ್ಕಾರ ಈ ನಾಮಕರಣ. ಆ ಪ್ರಾತಃಸ್ಮರಣೀಯರಿಗೆಲ್ಲ ರಾಜ್ಯದ ಜನತೆಯ ಪರವಾಗಿ ಕೃತಜ್ಞತೆಗಳು ಎಂದು ಹೇಳಿದ್ದರು. ರಾಜ್ಯದ ಹೆಸರನ್ನು ‘ಕರ್ನಾಟಕ’ ಎಂದು ಮಾರ್ಪಡಿಸುವ ಕುರಿತು ಸರ್ಕಾರದ ತೀರ್ಮಾನವನ್ನು ವಿಧಾನಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ದೇವರಾಜ ಅರಸು ಅವರೇ ಮಂಡಿಸಿದ್ದರು. ಆ ದಿನವನ್ನು ಅವರು ಇತಿಹಾಸದಲ್ಲಿ ಒಂದು ಹೊಸ ಅಧ್ಯಾಯದ ದಿವಸ ಎಂದು ಬಣ್ಣಿಸಿದ್ದರಲ್ಲದೆ, ‘ಕರ್ನಾಟಕ’ ಎನ್ನುವ ಹೆಸರನ್ನು ಹಿಂದೆ ರಾಜ್ಯ ಗುರುಗಳು ಉಪಯೋಗಿಸುತ್ತಿದ್ದರು. ಕರ್ನಾಟಕ ಸಿಂಹಾಸನಾಧೀಶ್ವರ ಎಂದು ಒಂದು ಕಾಲದಲ್ಲಿ ಮೈಸೂರು ರಾಜರು ಹೆಸರು ಇಟ್ಟುಕೊಂಡಿದ್ದರು. ಹೊಯ್ಸಳರು, ಕದಂಬರರೂ ಇಟ್ಟುಕೊಂಡಿದ್ದರು. ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಈ ಹೆಸರು ಬರುತ್ತಲೇ ಇತ್ತು. ಸಾಹಿತಿಗಳು ಸಾಹಿತ್ಯದಲ್ಲಿ ‘ಕರ್ನಾಟಕ’ ಎಂಬ ಹೆಸರನ್ನು ಇಡಬಹುದು ಎಂದು ಹೇಳಿದ್ದಾರೆ. ಅದರಂತೆ ಇಲ್ಲಿ ನಿರ್ಣಯವನ್ನು ಮಂಡಿಸಿದ್ದೇನೆ ಎಂದು ವಿವರಣೆಯನ್ನೂ ನೀಡಿದ್ದರು. ಆಚರಣೆಗಳು ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯ೦ತ ಮಹದಾನ೦ದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ ("ಜಯ ಭಾರತ ಜನನಿಯ ತನುಜಾತೆ")ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ. ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ. ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ. ಭಾರತ ಇನ್ನಿತರ ಪ್ರದೇಶಗಳಾದ ಮುಂಬಯಿ, ದೆಹಲಿ ಮುಂತಾದ ಕಡೆಯು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇದಲ್ಲದೆ ಗುರಗಾಂವ್ ಮತ್ತು ಚೆನೈ, ಸಾಗರೋತ್ತರದಲ್ಲಿ ಕನ್ನಡ ಸಂಸ್ಥೆ, ಅಮೇರಿಕಾ, ಸಿಂಗಾಪುರ್, ದುಬೈ , ಮಸ್ಕಟ್, ದಕ್ಷಿಣ ಕೊರಿಯಾ , ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಮೊದಲಾದ ಕಡೆಗಳಲ್ಲಿ ನೆಲೆಸಿರುವ ಕನ್ನಡಿಗರು ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಾರೆ. ಆಚರಣೆಯ ತಿಂಗಳು ನವೆಂಬರ್ ೧ ರಂದು ಅಧಿಕೃತವಾಗಿ ರಾಜ್ಯೋತ್ಸವವು ಆಚರಣೆ. ನವಂಬರ್ ತಿಂಗಳ ಪೂರ್ತಿ ರಾಜ್ಯೋತ್ಸವವನ್ನು ಹಲವು ಕಡೆ ಆಚರಿಸಲಾಗುತ್ತದೆ. ನವೆಂಬರ್ ೧ ಕರ್ನಾಟಕದಲ್ಲಿ ಸಾರ್ವಜನಿಕ ರಜೆ ಇರುತ್ತದೆ. ಈ ದಿನಗಳಲ್ಲಿ ಕರ್ನಾಟಕದ ಧ್ವಜ(ಹಳದಿ-ಕೆಂಪು) ಹಲವು ಕಡೆ ಹಾರಾಡುತ್ತಿರುತ್ತದೆ. ಬಾಹ್ಯ ಸಂಪರ್ಕ ೨೦೧೦ರ ಕರ್ನಾಟಕ ರಾಜ್ಯೋತ್ಸವ ಆಚರಣೆಯ ದೃಶ್ಯಾವಳಿಗಳು ಉಲ್ಲೇಖ ಕರ್ನಾಟಕ ಕನ್ನಡ ದಿನಾಚರಣೆಗಳು ಪ್ರಮುಖ ದಿನಗಳು
1172
https://kn.wikipedia.org/wiki/%E0%B2%B9%E0%B2%BF%E0%B2%82%E0%B2%A6%E0%B3%81%E0%B2%B8%E0%B3%8D%E0%B2%A4%E0%B2%BE%E0%B2%A8%E0%B2%BF%20%E0%B2%B6%E0%B2%BE%E0%B2%B8%E0%B3%8D%E0%B2%A4%E0%B3%8D%E0%B2%B0%E0%B3%80%E0%B2%AF%20%E0%B2%B8%E0%B2%82%E0%B2%97%E0%B3%80%E0%B2%A4
ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ
ಹಿಂದುಸ್ತಾನಿ ಸಂಗೀತ ಭಾರತದ ಎರಡು ಮುಖ್ಯ ಶಾಸ್ತ್ರೀಯ ಸಂಗೀತ ಪದ್ಧತಿಗಳಲ್ಲಿ ಒಂದು; ಉತ್ತರ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಭಾಗಶಃ ಕರ್ನಾಟಕ ರಾಜ್ಯದಲ್ಲಿ ಪ್ರಚಲಿತವಾಗಿದೆ. ಭಾರತದಲ್ಲಿ ಶಾಸ್ತ್ರೀಯ ಸಂಗೀತ ಧಾರ್ಮಿಕ ಅಂಗವಾಗಿ ಸಾಮವೇದ ಸಂಪ್ರದಾಯದಲ್ಲಿ ಹುಟ್ಟಿತು ಎಂದು ನಂಬಲಾಗಿದೆ. ೧೩-೧೪ ನೆಯ ಶತಮಾನಗಳಲ್ಲಿ ಉತ್ತರ ಭಾರತದಲ್ಲಿ ದೆಹಲಿ ಸುಲ್ತಾನೇಟ್ ಮತ್ತು ಮೊಘಲ್ ಸಾಮ್ರಾಜ್ಯದ ಆಡಳಿತ ಪ್ರಾರಂಭವಾದ ನಂತರ ಅನೇಕ ಸಂಗೀತಗಾರರು ಈ ರಾಜರ ಬಳಿ ಆಶ್ರಯ ಪಡೆದರು. ಮುಸ್ಲಿಮ್ ರಾಜರ ಆಸ್ಥಾನಗಳಲ್ಲಿ ಭಾರತೀಯ ಸಂಗೀತ ಪರ್ಷಿಯದ ಸಾಕಷ್ಟು ಸಂಗೀತ ತತ್ವಗಳನ್ನು ತನ್ನದಾಗಿಸಿಕೊಂಡಿತು. ಈ ಸಂಯುಕ್ತ ಸಂಪ್ರದಾಯ ಹಿಂದುಸ್ತಾನಿ ಸಂಗೀತವಾಗಿ ಬೆಳವಣಿಗೆ ಹೊಂದಿದೆ. ಮೊಘಲ್ ಕಾಲದ ಪ್ರಸಿದ್ಧ ಸಂಗೀತಗಾರ ಅಮೀರ್ ಖುಸ್ರೋ - ವೈದಿಕ ಸಂಪ್ರದಾಯದ ಸಂಗೀತ ಮತ್ತು ಪರ್ಷಿಯನ್ ಸಂಗೀತಗಳನ್ನು ಸಮಾಗಮಗೊಳಿಸಲು ಸಾಧ್ಯವಾಗುವ ಅನೇಕೆ ವಿಧಾನಗಳ ಪಿತಾಮಹ ಅಮೀರ್ ಖುಸ್ರೋ ಎಂದು ಪರಿಗಣಿಸಲಾಗಿದೆ. ಮೊಘಲ್ ಸಾಮ್ರಾಜ್ಯದ ಉನ್ನತಿಯಲ್ಲಿ ಅಕ್ಬರ್‍ನ ಆಡಳಿತದ ಕಾಲದ ಇನ್ನೊಬ್ಬ ಪ್ರಸಿದ್ಧ ಸಂಗೀತಗಾರ ತಾನ್ ಸೇನ್. ಪ್ರಸಿದ್ಧ ಸಂಗೀತಗಾರರು ಹಾಡುಗಾರರು ಈ ಸಂಗೀತ ಪದ್ಧತಿಯ ಪ್ರಸಿದ್ಧ ಹಾಡುಗಾರರಲ್ಲಿ ಪಂಡಿತ್ ಗುರುರಾವ್ ದೇಶಪಾಂಡೆ, ಪಂಡಿತ್ ಭೀಮಸೇನ್ ಜೋಷಿ,ಪಂಡಿತ್ ಜಸ್ ರಾಜ್, ಮಲ್ಲಿಕಾರ್ಜುನ ಮನ್ಸೂರ್, ಗಂಗೂಬಾಯಿ ಹಾನಗಲ್, ಬಸವರಾಜ ರಾಜಗುರು, ನಸ್ರತ್ ಫತೇ ಅಲಿ ಖಾನ್ (ಪಾಕಿಸ್ತಾನ) ಮೊದಲಾದವರನ್ನು ಹೆಸರಿಸಬಹುದು.ಪದ್ಮಶ್ರೀ ಎಂ.ವೆಂಕಟೇಶ್ ಕುಮಾರ್, ಇತ್ತೀಚಿನ ವರ್ಷಗಳಲ್ಲಿ ಪ್ರಸಿದ್ಧಿ ಪಡೆದವರಲ್ಲಿ ವಿನಾಯಕ ತೊರವಿ , ರಷೀದ್ ಖಾನ್, ಸಂಜೀವ್ ಅಭ್ಯಂಕರ್ ಮೊದಲಾದವರು ಸೇರಿದ್ದಾರೆ. ವಾದ್ಯ ಹಿಂದುಸ್ತಾನಿ ಸಂಗೀತ ಪದ್ಧತಿಯಲ್ಲಿ ಸಾಮಾನ್ಯವಾಗಿ ಉಪಯೋಗಿಸಲಾಗುವ ವಾದ್ಯಗಳಲ್ಲಿ ಸಿತಾರ್, ಸರೋದ್, ತಬಲಾ, ಸಾರಂಗಿ, ಸಂತೂರ್ ಮೊದಲಾದವುಗಳನ್ನು ಹೆಸರಿಸಬಹುದು. ವಾದ್ಯಗಳಲ್ಲಿ ಪರಿಣತಿ ಪಡೆದ ಸಂಗೀತಗಾರರಲ್ಲಿ ಅತಿ ಪ್ರಸಿದ್ಧರಾದವರಲ್ಲಿ ಕೆಲವರು: ಉಸ್ತಾದ್ ಬಿಸ್ಮಿಲ್ಲಾ ಖಾನ್(ಶಹನಾಯಿ), ಪಂಡಿತ್ ರವಿ ಶಂಕರ್ (ಸಿತಾರ್), ಶಿವಕುಮಾರ್ ಶರ್ಮಾ (ಸಂತೂರ್), ಹರಿಪ್ರಸಾದ್ ಚೌರಾಸಿಯಾ (ಕೊಳಲು), ಅಲ್ಲಾ ರಖಾ ಮತ್ತುಜಾಕಿರ್ ಹುಸೇನ್ (ಸಂಗೀತಗಾರ) (ತಬಲಾ), ಅಲಿ ಅಕ್ಬರ್ ಖಾನ್ ಮತ್ತು ಅಮ್ಜದ್ ಅಲಿ ಖಾನ್ (ಸರೋದ್). ಸಂಗೀತ ಪ್ರಕಾರಗಳು ಹಿಂದುಸ್ತಾನಿ ಹಾಡುಗಾರಿಕೆಗೆ ಸಂಬಂಧಪಟ್ಟಂತೆ ಹೆಚ್ಚಾಗಿ ಬಳಕೆಯಲ್ಲಿರುವ ಪ್ರಕಾರಗಳೆಂದರೆ ಖಯಾಲ್, ಗಜಲ್' ಮತ್ತು ಠುಮ್ರಿ. ಬಳಕೆಯಲ್ಲಿರುವ ಇತರ ಪ್ರಕಾರಗಳಲ್ಲಿ ಧ್ರುಪದ್, ಧಮಾರ್ ಮತ್ತು ತರಾನಾ ಗಳು ಸೇರಿವೆ. ಧ್ರುಪದ್ ಧ್ರುಪದ್ ಕೃತಿಗಳು ಮುಖ್ಯವಾಗಿ ಭಕ್ತಿಪ್ರಧಾನವಾದ ಕೃತಿಗಳು. ಕೆಲವೊಮ್ಮೆ ವೀರರಸ ಪ್ರಧಾನವಾಗಿರಬಹುದು. ಬಹುಪಾಲು ಧ್ರುಪದ್ ಕೃತಿಗಳು ಮಧ್ಯಕಾಲೀನ ಹಿಂದಿ ಭಾಷೆಯಲ್ಲಿವೆ. ಪಕ್ಕವಾದ್ಯಗಳಾಗಿ ಸಾಮಾನ್ಯವಾಗಿ ತಂಬೂರಿ ಮತ್ತು ಪಖಾವಾಜ್ ಗಳು ಉಪಯೋಗಗೊಳ್ಳುತ್ತವೆ. ಭಜನೆ ಭಜನೆ ಹಿಂದೂ ಧರ್ಮದ ಧಾರ್ಮಿಕ ಸಂಗೀತ ಪ್ರಕಾರಗಳಲ್ಲಿ ಮುಖ್ಯವಾದುದು. ಭಜನೆಗಳ ಪ್ರಸಿದ್ಧ ಕವಿಗಳೆಂದರೆ ಕಬೀರ್, ತುಲಸಿದಾಸ್ ಮತ್ತು ಮೀರಾ ಬಾಯಿ. ಭಜನೆಗಳ ಉಗಮ ೯-೧೦ ನೆಯ ಶತಮಾನದ ಆಳ್ವಾರ್ ಭಕ್ತಿ ಪಂಥದ ಕಾಲದಲ್ಲಿ ಆಯಿತೆಂದು ಊಹಿಸಲಾಗಿದೆ. ಗಜಲ್ ಗಜಲ್ ಮೂಲತಃ ಪರ್ಷಿಯಾದ ಸಂಗೀತ ಪ್ರಕಾರ. ಈಗಲೂ ಸಹ ಭಾರತದ ಹೊರಗೆ ಇರಾನ್, ಮಧ್ಯ ಏಷ್ಯಾ, ಟರ್ಕಿ ಮೊದಲಾದ ದೇಶಗಳಲ್ಲಿ ಈ ಸಂಗಿತ ಪ್ರಕಾರ ಪ್ರಚಲಿತವಾಗಿದೆ. ಭಾರತದಲ್ಲಿ ಗಜಲ್ ಗಳ ಜಾನಪದ ಹಾಗೂ ಜನಪ್ರಿಯ ರೂಪಾಂತರಗಳುಂಟು. ಭಾರತದ ಪ್ರಸಿದ್ಧ ಗಜಲ್ ಗಾಯಕರು ಜಗಜೀತ್ ಸಿಂಗ್, ಪಂಕಜ್ ಉಧಾಸ್ ಮೊದಲಾದವರು. ಪಾಕಿಸ್ತಾನದ ಮೆಹದಿ ಹಸನ್ ಮತ್ತು ಗುಲಾಂ ಅಲಿ ಈ ಶೈಲಿಯ ಪ್ರಸಿದ್ದ ಗಾಯಕರು. ಈ ಹಾಡುಗಳ ವಸ್ತು ಶೃಂಗಾರದಿಂದ ಭಕ್ತಿಯವರೆಗೆ ವ್ಯತ್ಯಾಸಗೊಳ್ಳುತ್ತದೆ. ಖಯಾಲ್ ಇತ್ತೀಚಿನ ವರ್ಷಗಳಲ್ಲಿ ಹಿಂದುಸ್ತಾನಿ ಸಂಗೀತದ ಅತ್ಯಂತ ಜನಪ್ರಿಯ ಪ್ರಕಾರ ಖಯಾಲ್. ಈ ಪ್ರಕಾರದಲ್ಲಿ ಮನೋಧರ್ಮ ಸಂಗೀತದ ಪ್ರಾಮುಖ್ಯತೆ ಇತರ ಪ್ರಕಾರಗಳದ್ದಕ್ಕಿಂತ ಹೆಚ್ಚು. ೧೮ ನೆಯ ಶತಮಾನದಿಂದ ಇತ್ತೀಚೆಗೆ ಜನಪ್ರಿಯವಾದ ಈ ಪ್ರಕಾರದ ಇತ್ತೀಚಿನ ಹಾಡುಗಾರರಲ್ಲಿ ಪ್ರಸಿದ್ಧರಾದವರು ಭೀಮಸೇನ್ ಜೋಷಿ, ಮಲ್ಲಿಕಾರ್ಜುನ ಮನ್ಸೂರ್, ಮತ್ತಿತರರು. ತರಾನಾ ತರಾನಾಗಳು ಕರ್ನಾಟಕ ಸಂಗೀತ ಪದ್ಧತಿಯ ತಿಲ್ಲಾನಾ ಗಳನ್ನು ಹೋಲುವಂತಹ ಕೃತಿಗಳು. ಸಂತೋಷ ಭಾವವನ್ನು ಮೂಡಿಸುವ ಉದ್ದೇಶವನ್ನು ಹೊಂದಿರುವ ಈ ಕೃತಿಗಳನ್ನು ಸಾಮಾನ್ಯವಾಗಿ ಕಛೇರಿಗಳ ಕೊನೆಯಲ್ಲಿ ಹಾಡಲಾಗುತ್ತದೆ. ಲಯಬದ್ಧವಾದ ಶಬ್ದಪುಂಜಗಳು ಹೆಚ್ಚಿದ್ದು ಪದಗಳ ಬಳಕೆ ಈ ಪ್ರಕಾರದಲ್ಲಿ ಕಡಿಮೆ. ಠುಮ್ರಿ ೧೯ ನೆಯ ಶತಮಾನದಲ್ಲಿ ಬಳಕೆಗೆ ಬಂದ ಶೃಂಗಾರ ರಸ ಪ್ರಧಾನವಾದ ಕೃತಿಗಳು. ಈ ಕೃತಿಗಳ ಭಾಷೆ ಸಾಮಾನ್ಯವಾಗಿ ಹಿಂದಿಯ ಪೂರ್ವರೂಪವಾದ ಬ್ರಜಭಾಷೆ. ಈ ಪ್ರಕಾರದ ಪ್ರಸಿದ್ಧ ಹಾಡುಗಾರರಲ್ಲಿ ಕೆಲವರೆಂದರೆ ಶೋಭಾ ಗುರ್ಟು, ಬಡೆ ಗುಲಾಮ್ ಅಲಿ ಖಾನ್ ಮತ್ತು ಗಿರಿಜಾ ದೇವಿ. ಇವನ್ನೂ ನೋಡಿ ಭೀಮಸೇನ್ ಜೋಷಿ ಗಂಗೂಬಾಯಿ ಹಾನಗಲ್ ಕರ್ನಾಟಕ ಸಂಗೀತ ಬಾಹ್ಯ ಸಂಪರ್ಕಗಳು ಹಿಂದುಸ್ತಾನಿ ಸಂಗೀತ ಕಲಿಯಿರಿ ಹಿಂದುಸ್ತಾನಿ ಸಂಗೀತ ಕಛೇರಿಗಳು ಸಂಸ್ಕೃತಿ ಸಂಗೀತ
1175
https://kn.wikipedia.org/wiki/%E0%B2%9C%E0%B2%B5%E0%B2%BE%E0%B2%B9%E0%B2%B0%E2%80%8C%E0%B2%B2%E0%B2%BE%E0%B2%B2%E0%B3%8D%20%E0%B2%A8%E0%B3%86%E0%B2%B9%E0%B2%B0%E0%B3%81
ಜವಾಹರ‌ಲಾಲ್ ನೆಹರು
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ . ಕಾಶ್ಮೀರಿ ಪಂಡಿತ್ ಸಮುದಾಯದೊಂದಿಗಿನ ಅವರ ಮೂಲ ವಂಶದಿಂದಾಗಿ ಅವರು ಪಂಡಿತ್ ನೆಹರೂ ಎಂದು ಕರೆಯಲ್ಪಡುತ್ತಾರೆ, ಭಾರತೀಯ ಮಕ್ಕಳಲ್ಲಿ ಅವರು ಚಾಚಾ ನೆಹರು ("ಅಂಕಲ್ ನೆಹರು") ಎಂದು ಪ್ರಸಿದ್ಧರಾಗಿದ್ದರು. (ಇಂಗ್ಲಿಷ್ ವಿಬಾಗದ ಅನುವಾದ) ಪೀಠಿಕೆ ನೆಹರುರವರ ಸಾರ್ವಜನಿಕ ಜೀವನ : ೧೮೮೯-೧೯೧೮ ಪಂಡಿತ್ ಜವಾಹರಲಾಲ್ ನೆಹರು ಅವರು ಪ್ರಮುಖ ನ್ಯಾಯವಾದಿ ಮತ್ತು ರಾಷ್ಟ್ರೀಯತಾವಾದಿ ರಾಜನೀತಿಜ್ಞ ಮೋತಿಲಾಲ್ ನೆಹರೂ ಮತ್ತು ಸ್ವರೂಪ್ ರಾಣಿ, ಅವರ ಮಗ. ನೆಹರು ಕೇಂಬ್ರಿಡ್ಜ್‍ನ ಟ್ರಿನಿಟಿ ಕಾಲೇಜ್ ಪದವೀಧರರಾಗಿದ್ದರು. ಇಂಗ್ಲೆಂಡ್‌ನಲ್ಲಿದ್ದಾಗ ನೆಹರು ಅವರು ಫೇಬಿಯನ್ ಸಾಮಾಜಿಕ ವಿಧಾನಗಳನ್ನು ಬಹುವಾಗಿ ಮೆಚ್ಚಿದ್ದರು. ಇಂಗ್ಲೆಂಡಿಲ್ಲಿ ಅವರು ಇನ್ನರ್ ಟೆಂಪಲ್ ನಲ್ಲಿ ತರಬೇತಿ ಪಡೆದು ನ್ಯಾಯವಾದಿಯಾಗಿ/ ಬ್ಯಾರಿಸ್ಟರ್’ಆಗಿ ಭಾರತಕ್ಕೆ ಹಿಂದಿರುಗಿದ ನಂತರ, ಅವರು ಅಲಹಾಬಾದ್ ಹೈಕೋರ್ಟ್ ನಲ್ಲಿ ಸೇರಿಕೊಂಡರು. ಮತ್ತು ರಾಷ್ಟ್ರೀಯ ರಾಜಕಾರಣದಲ್ಲಿ ಆಸಕ್ತಿಯನ್ನು ತೋರಿದರು, ತಂದೆಯೊಂದಿಗೆ ರಾಜಕೀಯದಲ್ಲಿ ಸಕ್ರಿಯರಾದರು. ಅಂತಿಮವಾಗಿ ಅವರ ಕಾನೂನು ವಿವಾದ ವಕೀಲಿ ಉದ್ಯೋಗವು ಬದಲಾಗಿ ಅವರ ಕಾರ್ಯ ರಾಷ್ರೀಯವಾದದಕಡೆ ತಿರುಗಿತು. ೧೯೧೬ರ ವಸಂತ ಪಂಚಮಿಯ ದಿನದಂದು ನೆಹರು ಅವರು ಕಮಲಾ ಕೌಲ್‌ರವರನ್ನು ಮದುವೆಯಾದರು. ಅವರ ಹದಿಹರೆಯದ ವರ್ಷಗಳಿಂದ ಬದ್ಧ ರಾಷ್ಟ್ರೀಯತಾವಾದಿಯಾಗಿದ್ದು, 1910 ರ ಕ್ರಾಂತಿಗಳ ಸಮಯದಲ್ಲಿ ಅವರು ಭಾರತೀಯ ರಾಜಕೀಯದಲ್ಲಿ ಏರುತ್ತಿರುವ ಉನ್ನತ ವ್ಯಕ್ತಿಯಾಗಿದ್ದರು. ಅವರು 1920 ರ ದಶಕದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್’ನ ಎಡಪಂಥೀಯ ಬಣಗಳ ಪ್ರಮುಖ ನಾಯಕರಾದರು ಮತ್ತು ಅಂತಿಮವಾಗಿ ಕಾಂಗ್ರೆಸ್’ನ ಸಂಪೂರ್ಣ ಮಾರ್ಗದರ್ಶಿಯಾದ ಗಾಂಧಿಯವರ ಅನುಮತಿಯೊಂದಿಗೆ ಇಡೀ ಕಾಂಗ್ರೆಸ್’ನ ನಾಯಕರಾದರು. ಕಾಂಗ್ರೆಸ್ ಅಧ್ಯಕ್ಷರಾಗಿ 1929 ರಲ್ಲಿ, ನೆಹರೂ ಬ್ರಿಟಿಷ್ ಆಳ್ವಿಕೆಯಿಂದ ಸಂಪೂರ್ಣ ಸ್ವಾತಂತ್ರ್ಯಕ್ಕಾಗಿ ಕರೆ ನೀಡಿದರು ಮತ್ತು ಕಾಂಗ್ರೆಸ್’ನ ನಿರ್ಣಾಯಕ ಬದಲಾವಣೆಯಿಂದ ಎಡಪಂಥಕ್ಕೆ ತಿರುಗಿಸಿದರು. 1930- 1947 ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷ :೧೯೧೮-೧೯೩೭ ೧೯೧೯ ರಲ್ಲಿ ಮಗಳು ಇಂದಿರಾ ಪ್ರಿಯದರ್ಶಿನಿ ಜನಿಸಿದಳು. ರಾಜಕೀಯದಲ್ಲಿ, ಮಹಾತ್ಮ ಗಾಂಧಿಯವರ ಶಿಷ್ಯನಾದ ಇವರು, ಮೊದಲ ಬಾರಿಗೆ ೧೯೨೯ ರಲ್ಲಿ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಉನ್ನತಿಗೇರಿದರು. ಈ ದಿನಗಳನ್ನು ಇವರು ಬಹುವಾಗಿ ಕಾರಾಗೃಹವಾಸದಲ್ಲಿದ್ದು ಪುಸ್ತಕಗಳು, ಪತ್ರಗಳನ್ನು ಬರೆಯುತ್ತಾ ಕಳೆದರು. 1930 ರ ದಶಕದಲ್ಲಿ ಭಾರತೀಯ ರಾಜಕೀಯದಲ್ಲಿ ನೆಹರೂ ಮತ್ತು ಕಾಂಗ್ರೆಸ್ ಪ್ರಮುಖ ಪತ್ರವಾಗಿತ್ತು. ಕಾಂಗ್ರೆಸ್ ನಾಯಕತ್ವದಲ್ಲಿ, 1937 ರ ಪ್ರಾಂತೀಯ ಚುನಾವಣೆಯನ್ನು ಮುನ್ನಡೆಸಿ ಹಲವಾರು ಪ್ರಾಂತ್ಯಗಳಲ್ಲಿ ಸರ್ಕಾರವನ್ನು ರಚಿಸಿದಾಗ ಅವರ “ಜಾತ್ಯತೀತ ರಾಷ್ಟ್ರ/-ದೇಶದ” ಅವರ ಕಲ್ಪನೆಯನ್ನು ಜನರು ಬೆಂಬಲಿಸುವಂತೆ ಕಂಡುಬಂತು; ಮತ್ತೊಂದೆಡೆ, ಪ್ರತ್ಯೇಕತಾವಾದಿ ಮುಸ್ಲಿಂ ಲೀಗ್ ಹೆಚ್ಚು ಕ್ಷೀನ ಬೆಂಬಲವನ್ನು ಗಳಿಸಿತು. ಆದರೆ 1942 ರಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ ನಂತರ ಈ ಸಾಧನೆಗಳು ತೀವ್ರವಾಗಿ ಹಿನ್ನಡೆ ಕಂಡು ರಾಜಿಯಾಗಿದ್ದವು, ಅದು ಬ್ರಿಟಿಷರು ಕಾಂಗ್ರೆಸ್ ಅನ್ನು ಒಂದು ರಾಜಕೀಯ ಸಂಘಟನೆಯಾಗಿ ಪರಿಗಣಿಸಿ ಅದನ್ನು ಪರಿಣಾಮಕಾರಿಯಾಗಿ ಬಗ್ಗುಬಡಿಯಿತು. ನೆಹರು ಅವರಿಗೆ ಸ್ವಾತಂತ್ರ್ಯಕ್ಕಾಗಿ ತಕ್ಷಣದ ಕರೆಕೊಡುವ ಮನಸ್ಸಿರಲಿಲ್ಲ, ಆದರೆ ಗಾಂಧಿಯವರ ಕರೆಗೆ ಬೆಂಲಿಸಿದರು. ಏಕೆಂದರೆ ಅವರು ಎರಡನೇ ವಿಶ್ವ ಸಮರ ಸಮಯದಲ್ಲಿ ಮಿತ್ರಪಕ್ಷದ ಯುದ್ಧದ ಚಟುವಟಿಕೆಯನ್ನು ಬೆಂಬಲಿಸಲು ಬಯಸಿದ್ದರು, ಅವರು ಹೆಚ್ಚು ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೀರ್ಘವಾದ ಸೆರೆವಾಸದಿಂದ ಹೊರಬಂದರು. ಅವರ ಹಳೆಯ ಕಾಂಗ್ರೆಸ್ ಸಹೋದ್ಯೋಗಿ ಮತ್ತು ಈಗ ಎದುರಾಳಿ ಮುಹಮ್ಮದ್ ಅಲಿ ಜಿನ್ನಾ ಅವರ ಮುಸ್ಲಿಂ ಲೀಗ್, ಆಗ ಭಾರತದಲ್ಲಿ ಮುಸ್ಲಿಂ ರಾಜಕೀಯವನ್ನು ಮುಸ್ಲಿಂ ರಾಜಕೀಯ ನೀತಿಯಿಂದ ಆಳಲು ಬಂದಿತು. ಅಧಿಕಾರ ಹಂಚಿಕೆಗಾಗಿ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ನಡುವಣ ಮಾತುಕತೆಗಳು ವಿಫಲವಾದವು ಮತ್ತು 1947 ರಲ್ಲಿ ಭಾರತದ ಸ್ವಾತಂತ್ರ್ಯ ಗಳಿಕೆಯು ಜೊತೆ ಭಾರತದ ರಕ್ತಸಿಕ್ತ ವಿಭಜನೆಗೆ ಕಾರಣವಾಯಿತು. ನೆಹರು ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ ನೇಮಕ ಮಾಡಲು ಕಾಂಗ್ರೆಸ್’ನಿಂದ ಚುನಾಯಿತರಾದರು, ಆದರೆ ನಾಯಕತ್ವ ಪ್ರಶ್ನೆಯ ವಿಚಾರದಲ್ಲಿ ನೆಹರು ಅವರನ್ನು ರಾಜಕೀಯ ಉತ್ತರಾಧಿಕಾರಿಯಾಗಿ 1941 ರಲ್ಲಿಯೇ ಅವರ ಸ್ಥಾನಮಾನವನ್ನು ಬಗೆಹರಿಸಲಾಗಿತ್ತು. ಗಾಧಿಜಿಯವರು ತಮ್ಮ ನಂತರದ ರಾಜಕೀಯ ಉತ್ತರಾಧಿಕಾರಿಯು ನೆಹರು ಎಂದು 1941 ರಲ್ಲೇ ಒಪ್ಪಿ ಹೇಳಿಕೆ ಕೊಟ್ಟಿದ್ದರು. ಪ್ರಧಾನಿಯಾಗಿ 1947- 1964 ಭಾರತದ ಮೊಟ್ಟ ಮೊದಲ ಪ್ರಧಾನಿಯಾಗಿ ೧೯೪೭-೧೯೬೪ ಪ್ರಧಾನಿಯಾಗಿ, ಅವರು ಭಾರತದ ಅವರ ದೃಷ್ಟಿಕೋನದ ರಾಷ್ಟ್ರವನ್ನು ಸಾಧಿಸಲು ಹೊರಟರು. 1950 ರಲ್ಲಿ ಭಾರತದ ಸಂವಿಧಾನವನ್ನು ಜಾರಿಗೊಳಿಸಲಾಯಿತು, ನಂತರ ಅವರು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಾರಂಭಿಸಿದರು. ಮುಖ್ಯವಾಗಿ, ಅವರು ಭಾರತವು ಒಂದು ವಸಾಹತು-ದೇಶದಿಂದ ಗಣರಾಜ್ಯವಾಗುದವರೆಗಿನ ರೂಪಾಂತರಕ್ಕೆ ಸಾಕ್ಷಯೂ ಕಾರಣೀಭೂತರೂ ಆದರು, ಬಹುಸಿದ್ಧಾತಗಳ ಬಹು ರಾಜಕೀಯ ಪಕ್ಷಗಳ (ಮಲ್ಟಿ-ಪಾರ್ಟಿ ಸಿಸ್ಟಮ್) ವ್ಯವಸ್ಥೆಯ ಪೋಷಣೆ ಮಾಡಿದರು.. ವಿದೇಶಿ ನೀತಿಯಲ್ಲಿ, ಅವರು ದಕ್ಷಿಣ ಏಷ್ಯಾದಲ್ಲಿ ಪ್ರಾದೇಶಿಕ ಮುಖ್ಯ ಸಂಯೊಜಕರಾಗಿ(ಹೆಗ್’ಮನ್) ಆಗಿ ಭಾರತವನ್ನು ಯೋಜಿಸಿ ಅಲಿಪ್ತ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ನೆಹರೂ ಅವರ ನಾಯಕತ್ವದಲ್ಲಿ, ಕಾಂಗ್ರೆಸ್ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ರಾಜಕೀಯವನ್ನು ನಿಯಂತ್ರಿಸುತ್ತಾ, 1951, 1957, ಮತ್ತು 1962 ರಲ್ಲಿ ಸತತ ಚುನಾವಣೆಯನ್ನು ಗೆದ್ದುಕೊಂಡು ಎಲ್ಲಾ ಪಕ್ಷಗಳನ್ನು ಮೀರಿಸಿದ (ಕ್ಯಾಚ್-ಆಲ್) ಪಕ್ಷವಾಗಿ ಹೊರಹೊಮ್ಮಿತು. ಅವರ ಕೊನೆಯ ವರ್ಷಗಳಲ್ಲಿ ರಾಜಕೀಯ ಸಮಸ್ಯೆಗಳ ನಡುವೆಯೂ. ಮತ್ತು 1962 ರಲ್ಲಿ ಸಿನೋ-ಇಂಡಿಯನ್ ಯುದ್ಧದ ಸಮಯದಲ್ಲಿ ನಾಯಕತ್ವದ ವೈಫಲ್ಯದಲ್ಲೂ ಅವರು ಭಾರತದ ಜನತೆಗೆ ಜನಪ್ರಿಯರಾಗಿದ್ದರು. ಭಾರತದಲ್ಲಿ ಅವರ ಜನ್ಮದಿನವನ್ನು “ಬಾಲ ದಿವಸ್” (ಮಕ್ಕಳ ದಿನ) ಎಂದು ಆಚರಿಸಲಾಗುತ್ತದೆ. ನೆಹರೂರವರು ೧೮ ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿದ್ದರು. ಇವರು ೧೯೬೪ರ ಮೇ ೨೭ ರಂದು ನಿಧನರಾದರು. ಪಂಡಿತ ಜವಹರಲಾಲ್ ನೆಹರೂರವರು 1947 ಆಗಸ್ಟ್ 14 ರ ಮಧ್ಯರಾತ್ರಿ (೧೨.೨೫), ಸಂಸತ್ತನ್ನುದ್ದೇಶಿಸಿ ಮಾಡಿದ 'ಎ ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣ ಪ್ರಸಿದ್ಧವಾಗಿದೆ. (It is considered to be one of the greatest speeches of the 20th century and to be a landmark oration that captures the essence of the triumphant culmination of the largely non-violent Indian independence struggle against the British Empire in India. (Tryst with Destiny) ಅದರ ಕನ್ನಡ ಅನುವಾದ -ಆರಂಭದ ವಾಕ್ಯಗಳು: "ಹಿಂದೊಮ್ಮೆ ನಾವು ವಿಧಿಗೊಂದು ಮಾತಿತ್ತಿದ್ದೆವು. (ಬಹಳ ವರ್ಷಗಳ ಹಿಂದೆ ನಾವು ಉತ್ತಮ ಭವಿಷ್ಯದ ಗುರಿಸಾಧನೆಗಾಗಿ ವಚನಬದ್ದತೆ ಹೊಂದಿದ್ದೇವೆ) ಅ ಭಾಷೆಯನ್ನು ಕೇವಲ ಸಂಪೂರ್ಣವಾಗಿಯಲ್ಲದೇಇದ್ದರೂ ಮಹತ್ತರವಾಗಿ ಕಾರ್ಯಗತಗೊಳಿಸುವ ಸಮಯ ಇಂದು ಒದಗಿದೆ. ಈ ನಡು ರಾತ್ರಿಯ ವಿಶೇಷ ಘಳಿಗೆಯಲ್ಲಿ, ಇಡೀ ವಿಶ್ವ ನಿದ್ರಿಸುತ್ತಿರುವಾಗ, ಭಾರತ ಸ್ವಾತಂತ್ರ್ಯವನ್ನು ಮೈದಳೆದು ಮೇಲೇಳಲಿದೆ. ಹಳೆತೆಲ್ಲವನ್ನೊದರಿ ಹೊಸತನಕ್ಕೆ ಕಾಲಿಡುವ ಮತ್ತು ಶತಮಾನಗಳಿಂದ ಶೋಷಿಸಲ್ಪಟ್ಟ ನಾಡಿನ ಆತ್ಮ ಧ್ವನಿದಳೆವ ಈ ಘಳಿಗೆ, ಇತಿಹಾಸದ ಅಪರೂಪದ ಮುಹೂರ್ತಗಳಲ್ಲೊಂದು. ಈ ಶುದ್ಧ ಸಮಯದಲ್ಲಿ ಭಾರತದ ಮತ್ತು ಭಾರತಾಂಬೆಯ ಸತ್ಪ್ರಜೆಗಳ ಸೇವೆಗಾಗಿ, ಹೆಚ್ಚೇನು ವಿಶ್ವದೊಳಿತಿಗಾಗಿ ನಮ್ಮದೆಲ್ಲವನ್ನು ಮುಡಿಪಿಡುವುದಾಗಿ ಮಾಡುವ ಪ್ರತಿಜ್ಞೆ ಅತೀ ಸಮರ್ಪಕವೆನಿಸುತ್ತದೆ." (Long years ago, we made a tryst with destiny, and now the time comes when we shall redeem our pledge, not wholly or in full measure, but very substantially. At the stroke of the midnight hour, when the world sleeps, India will awake to life and freedom. A moment comes, which comes but rarely in history, when we step out from the old to the new, when an age ends, and when the soul of a nation, long suppressed, finds utterance. It is fitting that at this solemn moment we take the pledge of dedication to the service of India and her people and to the still larger cause of humanity.) ಆರಂಭಿಕ ಜೀವನ ಮತ್ತು ವೃತ್ತಿಜೀವನ (1889-1912) ಜನನ ಮತ್ತು ಕುಟುಂಬದ ಹಿನ್ನೆಲೆ ಜವಾಹರಲಾಲ್ ನೆಹರು ಬ್ರಿಟಿಷ್ ಭಾರತದ ಅಲಹಾಬಾದಿನಲ್ಲಿ 14 ನವೆಂಬರ್ 1889 ರಂದು ಜನಿಸಿದರು. ಅವರ ತಂದೆ ಮೋತಿಲಾಲ್ ನೆಹರೂ (1861-1931), ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸೇರಿದ ಸ್ವ-ನಿರ್ಮಿತ ಶ್ರೀಮಂತ ವಕೀಲರು, 1919 ಮತ್ತು 1928 ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್’ನ ಅಧ್ಯಕ್ಷರಾಗಿ ಎರಡು ಬಾರಿ ಸೇವೆ ಸಲ್ಲಿಸಿದರು. ಅವರ ತಾಯಿ, ಸ್ವರೂಪ್ರಣಿ ಥುಸು (1868) -1938), ಲಾಹೋರಿನಲ್ಲಿ ನೆಲೆಗೊಂಡಿದ್ದ ಪ್ರಸಿದ್ಧ ಕಾಶ್ಮೀರಿ ಬ್ರಾಹ್ಮಣ ಕುಟುಂಬದಿಂದ ಬಂದವರು, ಮೋತಿಲಾಲ್ ಅವರ ಎರಡನೆಯ ಪತ್ನಿಯಾಗಿದ್ದರು, ಮೊದಲ ಪತ್ನಿ ಮೊದಲ ಮಗುವಿನ ಜನನ ಸಮಯದಲ್ಲಿ ಮರಣ ಹೊಂದಿದ್ದರು. ಜವಾಹರ್’ಲಾಲ್ ಮೂವರು ಮಕ್ಕಳಲ್ಲಿ ಹಿರಿಯರಾಗಿದ್ದರು, ಉಳಿದ ಇಬ್ಬರು ಬಾಲಕಿಯರು.ಹಿರಿಯ ಮಗಳು, ವಿಜಯ ಲಕ್ಷ್ಮಿ ನಂತರ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯ ಮೊದಲ ಮಹಿಳಾ ಅಧ್ಯಕ್ಷರಾದರು. ಕಿರಿಯ ಸಹೋದರಿ ಕೃಷ್ಣ ಹತೀಶಿಂಗ್ ಅವರು ಪ್ರಸಿದ್ಧ ಬರಹಗಾರರಾದರು ಮತ್ತು ಆಕೆಯು ತನ್ನ ಸಹೋದರನ ಮೇಲೆ ಹಲವಾರು ಪುಸ್ತಕಗಳನ್ನು ರಚಿಸಿದರು. ಬಾಲ್ಯ ನೆಹರೂ ಅವರ ಬಾಲ್ಯವನ್ನು "ಆಶ್ರಯ ಮತ್ತು ಸ್ವಾಭಾವಿಕವಾದುದು" ಎಂದು ಬಣ್ಣಿಸಿದ್ದಾರೆ. ಶ್ರೀಮಂತ ಮನೆಗಳಲ್ಲಿ ಆನಂದ್ ಭವನ ಎಂಬ ಹೆಸರಿನ ಅರಮನೆಯ ಎಸ್ಟೇಟ್ ಸೇರಿದಂತೆ ಅವರು ಸವಲತ್ತುಗಳ ವಾತಾವರಣದಲ್ಲಿ ಬೆಳೆದರು. ಅವರ ತಂದೆ ಅವರು ಖಾಸಗಿ ಗವರ್ನೆಸ್ ಮತ್ತು ಬೋಧಕರಿಂದ ಮನೆಯಲ್ಲಿ ಶಿಕ್ಷಣ ಕೊಡಿಸಿದ್ದರು. ಅವರಲ್ಲಿ ಒಬ್ಬ ಬೋಧಕ ಫರ್ಡಿನ್ಯಾಂಡ್ ಟಿ. ಬ್ರೂಕ್ಸ್ ನ ಪ್ರಭಾವದ ಅಡಿಯಲ್ಲಿ, ಅವರು ವಿಜ್ಞಾನ ಮತ್ತು ತತ್ವಶಾಸ್ತ್ರದಲ್ಲಿ ಆಸಕ್ತಿ ಹೊಂದಿದ್ದರು. ತರುವಾಯ ಅವರು ಥಿಯಾಸಾಫಿಕಲ್ ಸೊಸೈಟಿಯಲ್ಲಿ ಹದಿಮೂರನೇ ವಯಸ್ಸಿನಲ್ಲಿ ಕುಟುಂಬ ಸ್ನೇಹಿತೆ ಅನ್ನಿ ಬೆಸೆಂಟ್ ಅವರಿಂದ ಬೋಧಿಸಲ್ಪಟ್ಟರು. ಆದಾಗ್ಯೂ, ಥಿಯಾಸಾಫಿಕಲ್ ಸೊಸೈಟಿಯ ತತ್ವಶಾಸ್ತ್ರದ ಬಗೆಗಿನ ಅವರ ಆಸಕ್ತಿಯು ಶಾಶ್ವತವಾಗಿ ಉಳಿಯಲಿಲ್ಲ. ಬ್ರೂಕ್ಸ್ ತನ್ನ ಬೋಧಕನಾಗಿ ಹೊರಟು ಸ್ವಲ್ಪ ಸಮಯದ ನಂತರ ನೆಹರು ಥಿಯಾಸಾಫಿಕಲ್ ಸಮಾಜವನ್ನು ತೊರೆದನು. ಅವರು ಹೀಗೆ ಬರೆದಿದ್ದ್ದಾರೆ: "ಸುಮಾರು ಮೂರು ವರ್ಷಗಳ ಕಾಲ [ಬ್ರೂಕ್ಸ್] ನನ್ನೊಂದಿಗೆ ಇದ್ದರು ಮತ್ತು ಅನೇಕ ವಿಧಗಳಲ್ಲಿ ಅವರು ನನ್ನ ಮೆಲೆಹೆಚ್ಚು ಪ್ರಭಾವ ಬೀರಿದರು". ನೆಹರೂ ಅವರ ತತ್ವಶಾಸ್ತ್ರದ ಈ ಆಸಕ್ತಿಗಳು ಅವರನ್ನು ಬೌದ್ಧ ಮತ್ತು ಹಿಂದೂ ಧರ್ಮಗ್ರಂಥಗಳ ಅಧ್ಯಯನಕ್ಕೆ ಪ್ರೇರೇಪಿಸಿದವು. ಬಾಲ ರಾಮ್ ನಂದರ ಪ್ರಕಾರ, ಈ ಗ್ರಂಥಗಳು ನೆಹರೂರವರಿಗೆ "ಭಾರತದ [ಭಾರತದ] ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಮೊದಲ ಪರಿಚಯ ಮಾಡಿಕೊಡುವುವಾಗಿತ್ತು. [ಅವರು] ನೆಹರೂ ಅವರ [ತನ್ನ] ಬೌದ್ಧಿಕ ಶೋಧನೆಗೆ ಪ್ರಾರಂಭಿಕ ಉದ್ವೇಗವನ್ನು ಒದಗಿಸಿತು. ಇದು ನಂತರ ಅವರು ಬರೆದ ‘ದಿ ಡಿಸ್ಕವರಿ ಆಫ್ ಇಂಡಿಯಾ" ದಲ್ಲಿ ಪರಿಪಾಕವಾಗಿ ಹೊಮ್ಮಿತು. ಯೌವನ ನೆಹರೂ ತನ್ನ ಯೌವನದಲ್ಲಿ ತೀವ್ರವಾದ ರಾಷ್ಟ್ರೀಯತಾವಾದಿಯಾಗಿದ್ದರು. ಎರಡನೇ ಬೋಯರ್ ಯುದ್ಧ ಮತ್ತು ರುಸ್ಸೋ-ಜಪಾನೀಸ್ ಯುದ್ಧವು ಅವರ ಭಾವನೆಗಳನ್ನು ತೀವ್ರಗೊಳಿಸಿತು. ಎರಡನೆಯದರ ಬಗ್ಗೆ ಅವರು ಹೀಗೆ ಬರೆದಿದ್ದಾರೆ, "ಜಪಾನೀಯರ ಗೆಲುವುಗಳು ನನ್ನ ಉತ್ಸಾಹಕ್ಕೆ ಸಂಚಲನೆ ನೀಡಿದೆ ... ರಾಷ್ಟ್ರೀಯತಾವಾದಿ ವಿಚಾರಗಳು ನನ್ನ ಮನಸ್ಸನ್ನು ತುಂಬಿವೆ ... ನಾನು ಭಾರತೀಯ ಸ್ವಾತಂತ್ರ್ಯ ಮತ್ತು ಯುರೋಪಿನ ಅಧೀನತೆಯಿಂದ ಏಷ್ಯಾ ಸ್ವಾತಂತ್ರ್ಯದ ಬಗ್ಗೆ ಯೋಚಿಸಿದೆ". ಅವರು 1905 ರಲ್ಲಿ ಇಂಗ್ಲೆಂಡಿನ ಪ್ರಮುಖ ಶಾಲೆಯಾದ ಹ್ಯಾರೋನಲ್ಲಿ ತಮ್ಮ ಸಾಂಸ್ಥಿಕ ಶಿಕ್ಷಣವನ್ನು ಪ್ರಾರಂಭಿಸಿದರು, ಅವರು ಜಿಎಂ ಟ್ರೆವೆಲಿಯನ್’ನ ಗರಿಬಾಲ್ಡಿ ಪುಸ್ತಕಗಳಿಂದ ಪ್ರಭಾವಿತರಾಗಿದ್ದರು, ಅವರು ಶೈಕ್ಷಣಿಕ ಅರ್ಹತೆಗಾಗಿ ಬಹುಮಾನ ಪಡೆದಿದ್ದರು. ಅವರು ಗರಿಬಾಲ್ಡಿಯನ್ನು ಕ್ರಾಂತಿಕಾರಕ ನಾಯಕ ಎಂಬ ದೃಷ್ಠಿಯಿಂದ ನೋಡಿದರು. ಅವರು ಹೀಗೆ ಬರೆದಿದ್ದಾರೆ: "[ಭಾರತ]ದ ಸ್ವಾತಂತ್ರ್ಯಕ್ಕಾಗಿ ನನ್ನ ಧೈರ್ಯದ ಹೋರಾಟ ಮತ್ತು ನನ್ನ ಮನದಲ್ಲಿ ಭಾರತದ ಮತ್ತು ಇಟಲಿಯ ವಿಚಿತ್ರವಾದ ಮಿಶ್ರಣವನ್ನು ಪಡೆಯಿತು" ಎಂದು. (ಭಾರತದಲ್ಲಿ ಇದೇ ರೀತಿಯ ಕಾರ್ಯಗಳ ಕನಸುಗಳು ಬಂದವು). ಪದವಿ ಅಕ್ಟೋಬರ್ 1907 ರಲ್ಲಿ ಕೇಂಬ್ರಿಡ್ಜ್ನ ಟ್ರಿನಿಟಿ ಕಾಲೇಜ್’ಗೆ ನೆಹರು ಸೇರಿದರು ಮತ್ತು 1910 ರಲ್ಲಿ ನೈಸರ್ಗಿಕ ವಿಜ್ಞಾನದಲ್ಲಿ ಗೌರವ (ಆನರ್ಸ್) ಪದವಿ ಪಡೆದರು. ಈ ಅವಧಿಯಲ್ಲಿ ಅವರು ರಾಜಕಾರಣ, ಅರ್ಥಶಾಸ್ತ್ರ, ಇತಿಹಾಸ ಮತ್ತು ಸಾಹಿತ್ಯವನ್ನು ಶ್ರದ್ಧಾಪೂರ್ವಕವಾಗಿ ಅಧ್ಯಯನ ಮಾಡಿದರು. ಬರ್ನಾರ್ಡ್ ಷಾ, ಎಚ್.ಜಿ.ವೆಲ್ಸ್, ಜೆ.ಎಂ. ಕೀನ್ಸ್, ಬರ್ಟ್ರಾಂಡ್ ರಸ್ಸೆಲ್, ಲೋವೆಸ್ ಡಿಕಿನ್ಸನ್ ಮತ್ತು ಮೆರೆಡಿತ್ ಟೌನ್ಸೆಂಡ್ ಅವರ ಬರಹಗಳು ಅವರ ರಾಜಕೀಯ ಮತ್ತು ಆರ್ಥಿಕ ಚಿಂತನೆಯಿಂದಾಗಿ ರೂಪಿಸಲ್ಪಟ್ಟವು. 1910 ರಲ್ಲಿ ಪದವಿಯನ್ನು ಪೂರ್ಣಗೊಳಿಸಿದ ನಂತರ, ನೆಹರು ಲಂಡನ್ನಿಗೆ ತೆರಳಿ ಇನ್ನರ್ ಟೆಂಪಲ್–ಇನ್’ನಲ್ಲಿ ಕಾನೂನು ಅಧ್ಯಯನ ಮಾಡಿದರು [15] ಈ ಸಮಯದಲ್ಲಿ, ಅವರು ಬೀಟ್ರಿಸ್ ವೆಬ್ ಸೇರಿದಂತೆ ಫ್ಯಾಬಿಯನ್ ಸೊಸೈಟಿಯ ವಿದ್ವಾಂಸರ ಅಧ್ಯಯನವನ್ನು ಮುಂದುವರೆಸಿದರು. ಅವರನ್ನು 1912 ರಲ್ಲಿ ಬಾರ್’ಗೆ (ನ್ಯಾಯವಾದಿಯಾಗಿ) ಕರೆದರು. ಅಡ್ವೊಕೇಟ್ ಪದವಿ ಅಭ್ಯಾಸ ಆಗಸ್ಟ್ 1912 ರಲ್ಲಿ ಭಾರತಕ್ಕೆ ಹಿಂದಿರುಗಿದ ನಂತರ, ನೆಹರು ಅಲಹಾಬಾದ್ ಹೈಕೋರ್ಟಇನಲ್ಲಿ ವಕೀಲರಾಗಿ ಸೇರಿಕೊಂಡರು ಮತ್ತು ನ್ಯಾಯವಾದಿಯಾಗಿ ನೆಲೆಸಲು ಪ್ರಯತ್ನಿಸಿದರು. ಆದರೆ, ಅವರ ತಂದೆಗಿಂತ ಭಿನ್ನವಾಗಿ, ಅವರ ವೃತ್ತಿಜೀವನದಲ್ಲಿ ಅವರು ಶ್ರದ್ಧೆಯುಳ್ಳ ಆಸಕ್ತಿಯನ್ನು ಹೊಂದಿರಲಿಲ್ಲ ಮತ್ತು ಕಾನೂನಿನ ಅಭ್ಯಾಸ ಅಥವಾ ವಕೀಲರ ಕಂಪನಿಯನ್ನು ಆನಂದಿಸಲಿಲ್ಲ. ಅವರು ಹೀಗೆ ಬರೆದಿದ್ದಾರೆ: "ವಾತಾವರಣವು ಬೌದ್ಧಿಕವಾಗಿ ಉತ್ತೇಜಿಸುವಂತಿಲ್ಲ ಮತ್ತು ಜೀವನದ ಸಂಪೂರ್ಣ ಜಡತೆಯ ರ್ಥಹೀನ ಒಂದು ಭಾವ ನನ್ನ ಮೇಲೆ ಆವರಿಸಿತು." ರಾಷ್ಟ್ರೀಯತೆಯ ರಾಜಕೀಯದಲ್ಲಿ ಅವರ ಒಳಗೊಳ್ಳುವಿಕೆಯು ಅವರ ನ್ಯಾಯವಾದಿ ಉದ್ಯೋಗವನ್ನು ಮುಂಬರುವ ವರ್ಷಗಳಲ್ಲಿ ಕ್ರಮೇಣ ಬದಲಾಯಿಸಿತು. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ (1912-1947) ಬ್ರಿಟನ್ನಿನಲ್ಲಿ ನೆಹರೂ ಅವರು ಬ್ರಿಟನ್ನಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ಮತ್ತು ವಕೀಲರಾಗಿದ್ದಾಗ ಭಾರತೀಯ ರಾಜಕಾರಣದಲ್ಲಿ ಆಸಕ್ತಿ ಹೊಂದಿದ್ದರು. ಭಾರತಕ್ಕೆ ಮರಳಿದ ನಂತರ ಆರಂಭಿಕ ಕೊಡುಗೆ 1912 ರಲ್ಲಿ ಭಾರತಕ್ಕೆ ಹಿಂದಿರುಗಿದ ಕೆಲವೇ ತಿಂಗಳುಗಳಲ್ಲಿ, ಪಾಟ್ನಾದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ವಾರ್ಷಿಕ ಅಧಿವೇಶನಕ್ಕೆ ನೆಹರೂ ಹಾಜರಾಗಿದ್ದರು. ಕಾಂಗ್ರೆಸ್ 1912 ರಲ್ಲಿ ಮಧ್ಯಮವರ್ಗ ಮತ್ತು ಗಣ್ಯರ ಪಕ್ಷವಾಗಿತ್ತು ಅವರು "ಇಂಗ್ಲಿಷ್-ತಿಳಿವಳಿಕೆಯ ಉನ್ನತ-ವರ್ಗದ ವ್ಯವಹಾರ" ವನ್ನು ಅಲ್ಲಿನೋಡಿದ್ದರಿಂದ ಅವರಿಗೆ ಮುಜುಗರದ ಗೊಂದಲ ವಿಚಾರವುಂಟಾಯಿತು. ಕಾಂಗ್ರೆsಸ್ಸು ಪರಿಣಾಮಕಾರಿ ಆಗುವುದರ ಬಗ್ಗೆ ನೆಹರೂ ಅನುಮಾನಗಳನ್ನು ಹೊಂದಿದ್ದರು ಆದರೆ ದಕ್ಷಿಣ ಆಫ್ರಿಕಾದಲ್ಲಿ ಮಹಾತ್ಮಾ ಗಾಂಧಿಯವರು ನೇತೃತ್ವದ ಭಾರತೀಯ ನಾಗರಿಕ ಹಕ್ಕುಗಳ ಚಳವಳಿಯನ್ನು ಬೆಂಬಲಿಸಲು ಪಕ್ಷಕ್ಕೆ ಕೆಲಸ ಮಾಡಲು ಒಪ್ಪಿಕೊಂಡರು,. 1913 ರಲ್ಲಿ ಚಳುವಳಿಗೆ ಹಣವನ್ನು ಸಂಗ್ರಹಿಸಿದರು.ನಂತರ, ಅವರು ಬ್ರಿಟಿಷ್ ವಸಾಹತುಗಳಲ್ಲಿ ಭಾರತೀಯರು ಎದುರಿಸಿದ ಒಪ್ಪಂದಕ್ಕೆ ಒಳಗಾದ ಕಾರ್ಮಿಕರ ಮತ್ತು ಅಂತಹ ಇತರ ತಾರತಮ್ಯಗಳ ವಿರುದ್ಧ ಪ್ರಚಾರ ಮಾಡಿದರು. ವಿಶ್ವ ಸಮರ I ವಿಶ್ವ ಸಮರ- 1 ಆರಂಭವಾದಾಗ, ಭಾರತದಲ್ಲಿ ಸಹಾನುಭೂತಿಯು ಪರ – ವಿರೋಧವಾಗಿ ವಿಭಜಿಸಲ್ಪಟ್ಟಿತು. ಬ್ರಿಟಿಷ್ ಆಡಳಿತಗಾರರು ಶತ್ರುವಿನ ಎದುರು ಅಸಾಹಯಕರಾಗಿದ್ದನ್ನು ನೋಡಿದ ವಿದ್ಯಾವಂತ ಭಾರತೀಯರು "ಹೆಚ್ಚಿನ ಮತ್ತು ಅತೀವವಾದ ವಿನೋದದ ಸಂತಸವನ್ನು ಪಡೆದರು", ಆಡಳಿತದ ಮೇಲ್ವರ್ಗದವರು ಮಿತ್ರರಾಷ್ಟ್ರಗಳೊಂದಿಗೆ ಸಹಾನುಭೂತಿಯಿಂದ ಅವರ ಪರವಾಗಿದ್ದರು. ನೆಹರು ಅವರು ಯುದ್ಧವನ್ನು ಮಿಶ್ರಿತ ಭಾವನೆಗಳೊಂದಿಗೆ ನೋಡಿದ್ದಾಗಿ ನೆಹರೂ ಒಪ್ಪಿಕೊಂಡಿದ್ದಾರೆ. "ನೆಹರೂ ಅವರ ಸಹಾನುಭೂತಿಯು ಯಾವುದೇ ದೇಶದಪರವಾಗಿದ್ದರೆ ಅದು ಫ್ರಾನ್ಸ್’ನೊಂದಿಗೆ ಮಾತ್ರಾ, ಏಕೆಂದರ ಅದು ಅವರ ಸಂಸ್ಕೃತಿಯು ಮೆಚ್ಚುಗೆಯ ಬಹಳಷ್ಟು ಅಂಸಗಳನ್ನು ಪಡೆದಿದೆ" ಎಂದು ಲೇಖಕ ಪ್ರಾಂಕ ಮೊರೆಸ್ ಹೇಳಿದ್ದಾರೆ. ಯುದ್ಧದ ಸಮಯದಲ್ಲಿ, ನೆಹರು ಸೇಂಟ್ ಜಾನ್ ಆಂಬುಲೆನ್ಸ್ಗೆ ಸ್ವಯಂ ಸೇವಕರಾಗಿಸೇರ್ಪಡೆಗೊಂಡರು ಮತ್ತು ಪ್ರಾಂತೀಯ ಕಾರ್ಯದರ್ಶಿಯಾಗಿ ಅಲಹಾಬಾದಿನಲ್ಲಿ ಸಂಘಟನೆ ಮಾಡಿದರು. ಅವರು ಭಾರತದಲ್ಲಿ ಬ್ರಿಟಿಷ್ ಸರಕಾರವು ಜಾರಿಗೊಳಿಸಿದ ಸೆನ್ಸಾರ್ಶಿಪ್ ನಿಯಮಗಳ ವಿರುದ್ಧ ಮಾತನಾಡಿದರು. ಯುದ್ಧದ ವರ್ಷಗಳಲ್ಲಿ ನೆಹರೂ ಅವರ ರಾಜಕೀಯ ದೃಷ್ಟಿಕೋನವು “ತೀವ್ರಗಾಮಿ ಎಂದು ಪರಿಗಣಿಸಲ್ಪಟ್ಟ ನಾಯಕನಾಗಿ” ಹೊರಹೊಮ್ಮಿತು. ರಾಜಕೀಯ ಉಪನ್ಯಾಸದಲ್ಲಿ ಗೋಪಾಲ್ ಕೃಷ್ಣ ಗೋಖಲೆಯವರು ಪ್ರಾಮುಖ್ಯತೆ ಪಡೆದಿದ್ದರೂ ನೆಹರೂ ಅವರ ರಾಜಕೀಯ ದೃಷ್ಟಿಕೋನವು ವಿಚಾರ ಧಾರೆಯು ಗಮನಿಸಲ್ಪಟ್ಟಿತು., ಈ ಮಧ್ಯದಲ್ಲಿ ಪ್ರಾಬಲ್ಯ ಹೊಂದಿದ್ದ, ಗೋಪಾಲ್ ಕೃಷ್ಣ ಗೋಖಲೆಯವರು, ತೀವ್ರಗಾಮಿಗಳನ್ನು ಕುರಿತು "ಸ್ವಾತಂತ್ರ್ಯವನ್ನು ಯೋಚಿಸುವುದು ಹುಚ್ಚುತನ" ಎಂದು ಹೇಳಿದರು, ನೆಹರು ಮಾತನಾಡುತ್ತಾ "ಸಹಕಾರ ರಹಿತ ರಾಜಕೀಯದ ಬಗೆಗೆ ಮತ್ತು ಸರ್ಕಾರದ ಅಡಿಯಲ್ಲಿರುವ ಗೌರವಾನ್ವಿತ ಸ್ಥಾನಗಳಿಗೆ ರಾಜೀನಾಮೆ ನೀಡುವ ಅಗತ್ಯವನ್ನೂ ಮತ್ತು ಕೇವಲ ಜನರ ಪ್ರಾತಿನಿಧ್ಯದ ನಿರರ್ಥಕ ರಾಜಕೀಯವನ್ನು ಮುಂದುವರೆಸದಿರುವುದರ ವಿರುದ್ಧ ಮಾತನಡಿದರು ". ಅವರು ಬ್ರಿಟಿಷ್ ನೀತಿಗಳ ಬೆಂಬಲಕ್ಕಾಗಿ ಭಾರತೀಯ ನಾಗರಿಕ ಸೇವೆಯನ್ನು ಮುಂದುವರಿಸುವುದನ್ನು ಅಪಹಾಸ್ಯ ಮಾಡಿದರು. ಭಾರತೀಯ ನಾಗರಿಕ ಸೇವೆಯನ್ನು ಯಾರೊ ಒಬ್ಬರು ಒಮ್ಮೆ ವಿವರಿಸಿದ್ದಾರೆ- "ಅವರು ಈ ದೇಶದಲ್ಲಿ ದುರದೃಷ್ಟವಶಾತ್ ನಾವು , ಭಾರತೀಯರು ಅಲ್ಲದೆ, ನಾಗರಿಕರೂ ಅಲ್ಲದೆ ಅಥವಾ ನಿಜ ಸೇವೆ ಅಲ್ಲದೆ ಪೀಡಿತರಾಗಿದ್ದೇವೆ", ಎಂದು ಅವರು ಹೇಳಿದರು. ಮೋತಿಲಾಲ್ ನೆಹರು, ಒಬ್ಬ ಪ್ರಮುಖ ಮಧ್ಯಮಮಾರ್ಗ ಅನುಸರಿಸುವ ನಾಯಕರು, ಅವರು ಸಂವಿಧಾನಾತ್ಮಕ ಆಂದೋಲನದ ಇತಿ ಮಿತಿಗಳನ್ನು ಒಪ್ಪಿಕೊಂಡರು, ಆದರೆ ಇದಕ್ಕೆ ಯಾವುದೇ "ಪ್ರಾಯೋಗಿಕ ಪರ್ಯಾಯ" ಇಲ್ಲ ಎಂದು ತನ್ನ ಮಗನಿಗೆ ಸಲಹೆ ನೀಡಿದರು. ಆದಾಗ್ಯೂ, ರಾಷ್ಟ್ರೀಯ ಚಳುವಳಿಯ ವೇಗದಲ್ಲಿ ನೆಹರು ತೃಪ್ತಿ ಹೊಂದಲಿಲ್ಲ. ಅವರು ಭಾರತೀಯರಿಗೆ ಹೋಮ್ ರೂಲ್ ಬೇಡಿಕೆಯಿರುವ ಆಕ್ರಮಣಕಾರಿ ರಾಷ್ಟ್ರೀಯತಾವಾದಿ ಮುಖಂಡರ ಜೊತೆ ತೊಡಗಿಸಿಕೊಂಡರು. 1915 ರಲ್ಲಿ ಗೋಖಲೆ ಮೃತಪಟ್ಟ ನಂತರ ಕಾಂಗ್ರೆಸ್ ರಾಜಕೀಯದ ಮಧ್ಯಮ-ಮಾರ್ಗದವರ ಪ್ರಭಾವವು ಕ್ಷೀಣಿಸಲು ಆರಂಭಿಸಿತು. ಅನ್ನಿ ಬೆಸೆಂಟ್ ಮತ್ತು ಬಾಲ ಗಂಗಾಧರ ತಿಲಕ್ ಮುಂತಾದ ಮಧ್ಯಮಮಾರ್ಗದ ಮುಖಂಡರು ಹೋಮ್ ರೂಲ್ ಗಾಗಿ (ಸ್ವಯಂ ಆಡಳಿತ) ರಾಷ್ಟ್ರೀಯ ಚಳವಳಿಗೆ ಕರೆ ಮಾಡಲು ಈ ಅವಕಾಶವನ್ನು ಉಪಯೋಗಿಸಿದರು. ಆದರೆ, 1915 ರಲ್ಲಿ, ಪ್ರಸ್ತಾವನೆಯನ್ನು ತಿರಸ್ಕರಿಸಲಾಯಿತು ಏಕೆಂದರೆ ಮಧ್ಯಮ ಮಾರ್ಗದವರು ಇಂತಹ ಆಮೂಲಾಗ್ರ ಬದಲಾವಣೆಯ ಕ್ರಮಕ್ಕೆ ಉತ್ಸಾಹ ತೊರಲಿಲ್ಲ.. ಆದಾಗ್ಯೂ, ಬೆಸೆಂಟ್ 1916 ರಲ್ಲಿ ಹೋಮ್ ರೂಲ್ ಅನ್ನು ಸಮರ್ಥಿಸಲು ಲೀಗ್ ಅನ್ನು ರಚಿಸಿದರು; ಮತ್ತು ತಿಲಕ್ ಅವರು ಜೈಲಿನಿಂದ ಹೊರಬಂದಾಗ, ಏಪ್ರಿಲ್ 1916 ರಲ್ಲಿ ತಮ್ಮ ಸ್ವಂತ ಲೀಗ್ ಅನ್ನು ರಚಿಸಿದರು. ನೆಹರೂ ಎರಡೂ ಲೀಗ್’ ಗಳಲ್ಲಿ ಸೇರಿಕೊಂಡರು. ಆದರೆ ವಿಶೇಷವಾಗಿ ಮೊದಲು ಆರಂಭವಾದ ಬೆಸೆಂಟರ ಪರವಾಗಿ ಕೆಲಸ ಮಾಡಿದರು. ನೆಹರು ಬೆಸೆಂಟ್ ಬಗ್ಗೆ - " ಅವರು [ಬೆಸೆಂಟ್] ನನ್ನ ಬಾಲ್ಯದಲ್ಲಿ ನನ್ನ ಮೇಲೆ ತುಂಬಾ ಶಕ್ತಿಯುತವಾದ ಪ್ರಭಾವವನ್ನು ಹೊಂದಿದ್ದರು . ನಂತರ ನಾನು ರಾಜಕೀಯ ಜೀವನಕ್ಕೆ ಪ್ರವೇಶಿಸಿದಾಗ ಅವರ ಪ್ರಭಾವ ಮುಂದುವರೆದಿದೆ" ಎಂದು ಅವರು ನಂತರ ವಿವರಿಸಿದರು. ಭಾರತೀಯ ರಾಜಕೀಯದಲ್ಲಿ ತೀವ್ರಗಾಮಿ ಬದಲಾವಣೆಯನ್ನು ತಂದ ಮತ್ತೊಂದು ಬೆಳವಣಿಗೆಯು, ಡಿಸೆಂಬರ್ 1916 ರಲ್ಲಿ ಕಾಂಗ್ರೆಸ್’ನ ವಾರ್ಷಿಕ ಸಭೆಯಲ್ಲಿ ಲಖನೌ ಒಪ್ಪಂದದೊಂದಿಗೆ ಹಿಂದೂ-ಮುಸ್ಲಿಂ ಏಕತೆಗೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಅಲಹಾಬಾದಿನಲ್ಲಿ ಈ ಒಪ್ಪಂದವನ್ನು ಸೂಚಿಸಲಾಯಿತು. ಇದು ಆನಂದ್ ಭವನದಲ್ಲಿ ನೆಹರು ನಿವಾಸದಲ್ಲಿ ನಡೆಯಿತು. ಇಬ್ಬರು ಭಾರತೀಯ ಸಮುದಾಯಗಳ ನಡುವಿನ ಹೊಂದಾಣಿಕೆಯನ್ನು ನೆಹರೂ ಸ್ವಾಗತಿಸಿದರು ಮತ್ತು ಪ್ರೋತ್ಸಾಹಿಸಿದರು. ಹೋಂರೂಲ್ ಚಳುವಳಿ ಹೋಂರೂಲ್ ಚಳುವಳಿ (ಸ್ವಯಮಾಡಳಿತ ಚಳುವಳಿ) ಹಲವಾರು ರಾಷ್ಟ್ರೀಯತಾವಾದಿ ಮುಖಂಡರು 1916 ರಲ್ಲಿ ಅನ್ನಿ ಬೆಸೆಂಟ್ ನಾಯಕತ್ವದಡಿಯಲ್ಲಿ ಸ್ವಯಂ-ಆಡಳಿತಕ್ಕಾಗಿ ಬೇಡಿಕೆಯನ್ನು ಇಟ್ಟರು. ಅದು ಆಸ್ಟ್ರೇಲಿಯಾ, ಕೆನಡಾ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್ ಮತ್ತು ನ್ಯೂಫೌಂಡ್ಲ್ಯಾಂಡ್’ಗಳಂತೆ ಬ್ರಿಟಿಷ್ ಸಾಮ್ರಾಜ್ಯದೊಳಗೆ ಒಂದು ಪರಮಾಧಿಕಾರದ ಸ್ಥಿತಿಯನ್ನು ಪಡೆದುಕೊಳ್ಳಲು ಒಟ್ಟಿಗೆ ಸೇರಿದರು. ನೆಹರು ಈ ಚಳವಳಿಯಲ್ಲಿ ಸೇರಿಕೊಂಡರು ಮತ್ತು ಅದರಲ್ಲಿ ಬೆಸೆಂಟ್ ಅವರ ಹೋಮ್ ರೂಲ್ ಲೀಗ್‍ಗೆ ಕಾರ್ಯದರ್ಶಿಯಾಗುವ ಮಟ್ಟಕ್ಕೆ ಏರಿದರು. ಜೂನ್ 1917 ರಲ್ಲಿ ಬೆಸೆಂಟ್ ಅವರನ್ನು ಬಂಧಿಸಿ ಬ್ರಿಟಿಷ್ ಸರ್ಕಾರ ಗೃಹಬಂಧನದಲ್ಲಿ ಇರಿಸಿತು. ಕಾಂಗ್ರೆಸ್ ಮತ್ತು ಇತರ ಭಾರತೀಯ ಸಂಘಟನೆಗಳು ಅವರನ್ನು (ಬೆಸೆಂಟ್) ಬಂಧಮುಕ್ತ ಮಾಡದಿದ್ದಲ್ಲಿ ಪ್ರತಿಭಟನೆಗಳನ್ನು ಪ್ರಾರಂಭಿಸಲು ಬೆದರಿಕೆ ಹಾಕಿದರು. ತರುವಾಯ ತೀವ್ರವಾದ ಪ್ರತಿಭಟನೆ ಮತ್ತು ಒತ್ತಾಯದ ಕಾರಣ ಬ್ರಿಟಿಷ್ ಸರ್ಕಾರವು ಬೆಸೆಂಟ್’ ರನ್ನು ಬಿಡುಗಡೆ ಮಾಡಿತು ಮತ್ತು ಅದು ಸ್ವಲ್ಪ ಸಮಯದ ನಂತರ ಅವರಿಗೆ ಗಣನೀಯ ರಿಯಾಯಿತಿಗಳನ್ನು ನೀಡಬೇಕಾಯಿತು. ಅಸಹಕಾರ ಚಳುವಳಿ 1920 ರಲ್ಲಿ ಅಸಹಕಾರ ಚಳವಳಿಯ ಆರಂಭದಲ್ಲಿ ನೆಹರು ಅವರು ಮೊದಲ ಬಾರಿಗೆ ರಾಷ್ಟ್ರೀಯ ರಾಜಕೀಯ ವಿಚಾರದಲ್ಲಿ ದೊಡ್ಡ ಮಟ್ಟದಲ್ಲಿ ತೊಡಗಿಗೊಂಡರು. ಯುನೈಟೆಡ್ ಪ್ರಾಂತ್ಯಗಳಲ್ಲಿ (ಈಗ ಉತ್ತರ ಪ್ರದೇಶ) ಚಳವಳಿಯನ್ನು ಅವರು ಮುನ್ನಡೆಸಿದರು. 1921 ರಲ್ಲಿ ನೆಹರು ಅವರನ್ನು ಸರ್ಕಾರಿ-ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಬಂಧಿಸಲಾಯಿತು ಮತ್ತು ಕೆಲವು ತಿಂಗಳುಗಳ ನಂತರ ಬಿಡುಗಡೆ ಮಾಡಲಾಯಿತು. ಚೌರಿ ಚೌರಾ ಘಟನೆಯ ನಂತರ ಅಸಹಕಾರ ಚಳವಳಿಯನ್ನು ನಿಲ್ಲಿಸಿದ ನಂತರ, ಕಾಂಗ್ರೆಸ್‍ಸಿನೊಳಗೆ ರೂಪುಗೊಂಡ ಭಿನ್ನಾಭಿಪ್ರಾಯ-ಬಿರುಕುಗಳಲ್ಲಿ, ನೆಹರು ಗಾಂಧಿಗೆ ನಿಷ್ಠಾವಂತರಾಗಿದ್ದರು. ಅವರ ತಂದೆ ಮೋತಿಲಾಲ್ ನೆಹರೂ ಮತ್ತು ಸಿ.ಆರ್.ದಾಸರಿಂದ ರೂಪುಗೊಂಡ ಸ್ವರಾಜ್ ಪಕ್ಷದೊಂದಿಗೆ ನೆಹರು ಸೇರಲಿಲ್ಲ. [29] [30] ಭಾರತೀಯ ಸ್ವಾತಂತ್ರ್ಯಕ್ಕಾಗಿ ಅಂತರರಾಷ್ಟ್ರೀಕರಣದ ಹೋರಾಟ ಭಾರತದ ಸ್ವಾತಂತ್ರ್ಯ ಹೋರಾಟದ ಅಂತರರಾಷ್ಟ್ರೀಯ ದೃಷ್ಟಿಕೋನವನ್ನು ಅಭಿವೃದ್ಧಿಪಡಿಸುವಲ್ಲಿ ನೆಹರು ಪ್ರಮುಖ ಪಾತ್ರ ವಹಿಸಿದರು. ಅವರು ಭಾರತಕ್ಕೆ ವಿದೇಶಿ ಮೈತ್ರಿಕೂಟಗಳನ್ನು ಕೋರಿದರು ಮತ್ತು ಪ್ರಪಂಚದಾದ್ಯಂತ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವಕ್ಕಾಗಿ ನೆಡೆದ ಚಳುವಳಿಗಳೊಂದಿಗೆ ಸಂಪರ್ಕ ಕಲ್ಪಿಸಿದರು. 1927 ರಲ್ಲಿ ಬೆಲ್ಜಿಯಂನಲ್ಲಿ ಬ್ರಸೆಲ್ಸ್’ನಲ್ಲಿ ರಾಷ್ಟ್ರೀಯತೆಯನ್ನು ದಬ್ಬಾಳಿಕೆಗೆಒಳಗಾದ ಕಾಂಗ್ರೆಸ್’(ಸಮ್ಮೇಳನಕ್ಕೆ) ಗೆ ಹಾಜರಾಗಲು ಭಾರತದ ಕಾಂಗ್ರೆಸ್’ಗೆ ಆಹ್ವಾನ ನೀಡಲಾಯಿತು. ಸಾಮ್ರಾಜ್ಯಶಾಹಿ ವಿರುದ್ಧ ಸಾಮಾನ್ಯ ಹೋರಾಟವನ್ನು ಸಂಘಟಿಸಲು ಮತ್ತು ಯೋಜಿಸಲು ಸಭೆಯನ್ನು ಕರೆಯಲಾಯಿತು. ನೆಹರು ಭಾರತವನ್ನು ಪ್ರತಿನಿಧಿಸಿದರು ಮತ್ತು ಈ ಸಭೆಯಲ್ಲಿ ಜನಿಸಿದ ಇಂಪೀರಿಯಲ್’- ವಾದದ ವಿರುದ್ಧ ಲೀಗ್’ನ ಕಾರ್ಯನಿರ್ವಾಹಕ ಕೌನ್ಸಿಲ್ಲಿಗೆ ಆಯ್ಕೆಯಾದರು. ಹೆಚ್ಚೂ ಕಮ್ಮಿ, ಜಗತ್ತಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತ, ಸ್ವಾತಂತ್ರ್ಯಕ್ಕಾಗಿ ಸಾಮ್ರಾಜ್ಯದ ವಿವಿಧ ವಸಾಹತುಗಳು ಮತ್ತು ಅವುಗಳ ಪ್ರಾಬಲ್ಯಗಳ ವಿರುದ್ಧ ಹೋರಾಟ, ಬಹು-ರಾಷ್ಟ್ರೀಯ ಪ್ರಯತ್ನ, ಇವುಗಳನ್ನು ನೆಹರು ಕಂಡರು; ಆದಾಗ್ಯೂ, ಈ ವಿಷಯದ ಬಗ್ಗೆ ಅವರ ಕೆಲವು ಹೇಳಿಕೆಗಳು, ಹಿಟ್ಲರನ ಉದಯ ಮತ್ತು ಅವರ ಸಮರ್ಥನೆಯ ಉದ್ದೇಶಗಳೊಂದಿಗೆ ಜಟಿಲತೆಯಿಂದ ಕೂಡಿದೆ ಎಂದು ವ್ಯಾಖ್ಯಾನಿಸಲ್ಪಟ್ಟಿವೆ. ಈ ಆರೋಪಗಳ ಮುಖಾಂತರ ನೆಹರು, " ನಾವು ಪ್ಯಾಲೆಸ್ಟೈನಿನಲ್ಲಿನ ಅರಬ್ಬರ ರಾಷ್ಟ್ರೀಯ ಚಳವಳಿಯ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ ಏಕೆಂದರೆ ಅದು ಬ್ರಿಟಿಷ್ ಸಾಮ್ರಾಜ್ಯಶಾಹಿ ವಿರುದ್ಧ ನಿರ್ದೇಶಿಸಲ್ಪಟ್ಟಿತ್ತು. ಪ್ಯಾಲೆಸ್ಟೈನ್ ಬಗೆಗೆ ನಮ್ಮ ಸಹಾನುಭೂತಿ ಹಿಟ್ಲರನ ಹಿತಾಸಕ್ತಿಗಳಿಗೆ ಸರಿಹೊಂದುವ ಸಂಗತಿಯಿಂದ ನಮ್ಮ ಆ ಚಳುವಳಿಯ ಬಗ್ಗೆ ಸಹಾನುಭೂತಿಯನ್ನು ದುರ್ಬಲಗೊಳಿಸಲಾಗದು". 1930 ರ ಮಧ್ಯಕಾಲ 1930 ರ ದಶಕದ ಮಧ್ಯಭಾಗದಲ್ಲಿ, ನೆಹರು [[ಯುರೋಪ್‍ನಲ್ಲಿನ ಬೆಳವಣಿಗೆಗಳ ಬಗ್ಗೆ ಬಹಳ ಕಾಳಜಿಯನ್ನು ಹೊಂದಿದ್ದರು, ಅದು ಮತ್ತೊಂದು ವಿಶ್ವ ಯುದ್ಧದ ಕಡೆಗೆ ತಿರುಗುತ್ತಿತ್ತು. ಅವರು 1936 ರ ಆರಂಭದಲ್ಲಿ ಯೂರೋಪಿನಲ್ಲಿದ್ದರು. ಸ್ವಿಜರ್ಲ್ಯಾಂಡ್ನಲ್ಲಿನ ಸ್ಯಾನಿಟೇರಿಯಮ್ನಲ್ಲಿ ಅವರು ಕೆಲವೇ ದಿನಗಳಲ್ಲಿ ಸಾಯುವ ಸ್ಥಿತಿಯಲ್ಲದ್ದ, ಅವರ ಅನಾರೋಗ್ಯದ ಪತ್ನಿಯನ್ನು ಭೇಟಿ ಮಾಡಿದರು. ಈ ಸಮಯದಲ್ಲೂ ಸಹ, ಯುದ್ಧದ ಸಂದರ್ಭದಲ್ಲಿ, ಭಾರತವು ಪ್ರಜಾಪ್ರಭುತ್ವಗಳ ಜೊತೆಯಲ್ಲಿರುವುದಾಗಿಯೂ, ಆದರೂ ಗ್ರೇಟ್ ಬ್ರಿಟನ್ ಮತ್ತು ಫ್ರಾನ್ಸ್’ನ ಜೊತೆ ಸ್ವತಂತ್ರ ರಾಷ್ಟ್ರವಾಗಿ ಭಾರತವು ಮಾತ್ರ ಹೋರಾಟ ನಡೆಸಬಹುದೆಂದು ಅವರು ಒತ್ತಾಯಿಸಿದರು ಸುಭಾಷ್ ಚಂದ್ರ ಬೋಸ್ ಅವರಿಂದ ದೂರವಾದುದು ನೆಹರೂ ಸುಭಾಷ್ ಚಂದ್ರ ಬೋಸ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದರು. ಜಗತ್ತಿನಾದ್ಯಂತ ಸ್ವತಂತ್ರ ರಾಷ್ಟ್ರಗಳ ಸರಕಾರಗಳೊಂದಿಗೆ ಉತ್ತಮ ಸಂಬಂಧವನ್ನು ಬೆಳೆಸಿದರು. ಆದಾಗ್ಯೂ, 1930 ರ ದಶಕದ ಅಂತ್ಯದಲ್ಲಿ ಪರಸ್ಪರ ದೂರವಾದರು., ಬೋಸರು ಬ್ರಿಟಿಷರನ್ನು ಭಾರತದ ಹೊರಗೆ ಹಾಕುವಲ್ಲಿ ಫ್ಯಾಸಿಸ್ಟರ (ಜರ್ಮನಿಯ ಹಿಟ್ಲರನ ಏಕ ಪಕ್ಷೀಯ ಆಡಳಿತ) ಸಹಾಯ ಪಡೆಯಲು ಒಪ್ಪಿಕೊಂಡಾಗ ನೆಹರೂ ಸುಭಾಷ್’ರಿಂದ ದೂರವಾದರು. ಅದೇ ಸಮಯದಲ್ಲಿ, ಸ್ಪ್ಯಾನಿಷ್ ಅಂತರ್ಯುದ್ಧದಲ್ಲಿ ಫ್ರಾನ್ಸಿಸ್ಕೊ ಫ್ರಾಂಕೊ ಅವರ ಪಡೆಗಳ ವಿರುದ್ಧ ಹೋರಾಡಿದ ರಿಪಬ್ಲಿಕನ್ನರನ್ನು ನೆಹರೂ ಬೆಂಬಲಿಸಿದರು. ನೆಹರು ಅವರ ಸಹಾಯಕ ವಿ. ಕೆ. ಕೃಷ್ಣ ಮೆನನ್ ಅವರೊಂದಿಗೆ ಸ್ಪೇನಿಗೆ ಭೇಟಿ ನೀಡಿದರು ಮತ್ತು ರಿಪಬ್ಲಿಕನ್ ಪಕ್ಷದ ಬೆಂಬಲವನ್ನು ಘೋಷಿಸಿದರು., ಮುಸೊಲಿನಿ ನೆಹರೂ ಅವರನ್ನು ಭೇಟಿಯಾಗಲು ತನ್ನ ಆಸೆಯನ್ನು ವ್ಯಕ್ತಪಡಿಸಿದನು; .ಆದರೆ ನಂತರ ಇಟಲಿಯ ಸರ್ವಾಧಿಕಾರಿಯಾದ ಬೆನಿಟೊ ಅವರನ್ನು ಭೇಟಿಯಾಗಲು ನೆಹರೂ ನಿರಾಕರಿಸಿದರು. ರಿಪಬ್ಲಿಕನ್ ಸಿದ್ಧಾಂತ ಭಾರತೀಯ ರಾಜಕುಮಾರರು ಆಳಿದ ರಾಜ್ಯಗಳಲ್ಲಿನ ಜನರ ನೋವುಗಳನ್ನು ಅರಿತುಕೊಳ್ಳುವ ಮೊದಲ ರಾಷ್ಟ್ರೀಯ ನಾಯಕರಲ್ಲಿ ನೆಹರು ಒಬ್ಬರಾಗಿದ್ದರು. ಭ್ರಷ್ಟ ಮಹಾಮಂತ್ರಿಗಳ ವಿರುದ್ಧ ಸಿಖ್ಖರು ನಡೆಸುತ್ತಿದ್ದ ಹೋರಾಟವನ್ನು ನೋಡಲು ಅವರು ಅಲ್ಲಿಗೆ ಹೋದಾಗ, ನಭಾ ಎಂಬ ರಾಜನ ಆಜ್ಞೆಯಿಂದ ಅವರು ಜೈಲು ಶಿಕ್ಷೆ ಅನುಭವಿಸಿದರು. ರಾಷ್ಟ್ರೀಯತಾವಾದಿ ಚಳವಳಿಯು ನೇರವಾಗಿ ಬ್ರಿಟಿಷ್ ಆಳ್ವಿಕೆಯ ಅಡಿಯಲ್ಲಿರುಚ ಪ್ರದೇಶಗಳಿಗೆ ಸೀಮಿತವಾಗಿತ್ತು. ಸ್ವಾತಂತ್ರ್ಯಕ್ಕಾಗಿ ರಾಷ್ಟ್ರೀಯತಾವಾದಿ ಚಳವಳಿಯ ಭಾಗವಾಗಿ ರಾಜರ ರಾಜ್ಯಗಳಲ್ಲಿ ಜನರು ಹೋರಾಟ ಮಾಡಲು ಅವರು ಸಹಾಯ ಮಾಡಿದರು. 1927 ರಲ್ಲಿ “ಆಲ್ ಇಂಡಿಯಾ ಸ್ಟೇಟ್ಸ್ ಪೀಪಲ್ಸ್ ಕಾನ್ಫರೆನ್ಸ್” (ರಾಜರ ಆಳ್ವಿಕೆಯ ಜನರ ಸಮ್ಮೇಳನ) ರಚನೆಯಾಯಿತು. ಹಲವು ವರ್ಷಗಳ ಕಾಲ ರಾಜ ಸಂಸ್ಥಾನದ ಜನರಿಗೆ ನೆರವಾಗಿದ್ದ ನೆಹರು ಅವರು 1935 ರಲ್ಲಿ ನಡೆದ ಸಮಾವೇಶದ ಅಧ್ಯಕ್ಷರಾದರು. ಅವರು ರಾಜಕೀಯ ಶ್ರೇಣಿಯಕ್ರಮದಿಂದ ಸದಸ್ಯತ್ವ ಪಡೆಯಲು ಅದರ ಶ್ರೇಣಿಯನ್ನು ತೆರೆದರು. ಭಾರತದ ರಾಜಕೀಯ ಏಕೀಕರಣದ ಸಂದರ್ಭದಲ್ಲಿ ಈ ಸಂಸ್ಥೆಯು ಪ್ರಮುಖ ಪಾತ್ರ ವಹಿಸುತ್ತದೆ, ಭಾರತೀಯ ನಾಯಕರಿಗೆ ಸಹಾಯ ಮಾಡುತ್ತದೆ ಎಂಬ ಉದ್ದೇಶವಿತ್ತು. ಭಾರತದ ವರ್ಣರಂಜಿತ ರಾಜಕೀಯ ನಾಯಕರಾದ ವಲ್ಲಭಭಾಯ್ ಪಟೇಲ್ ಮತ್ತು ವಿ. ಪಿ. ಮೆನನ್’ರಿಗೆ, "ರಾಜರ ಆಳ್ವಿಕೆಯ ಜನರ ಸಮ್ಮೇ ಳನ"ದ ಅದ್ಯಕ್ಷರಾದ ನೆಹರು ಅವರು ರಾಜಪ್ರಭುತ್ವ ರಾಜ್ಯಗಳನ್ನು ಭಾರತದೊಳಗೆ ಸಂಯೋಜಿಸುವ ಕಾರ್ಯವನ್ನು ನಿಯೋಜಿಸಿದರು (1935). ನೂರಾರು ರಾಜರುಗಳೊಂದಿಗೆ ಮಾತುಕತೆ ನಡೆಸಿ ಭಾರತದ ರಾಜಕೀಯ ಏಕೀಕರಣವನ್ನು ಸಾಧಿಸಲು ಇವರು ಪ್ರಮುಖ ಪಾತ್ರವಹಿಸಬಲ್ಲರು ಎಂದು ಅವರು ನಂಬಿದ್ದರು. (ವಿ.ಪಿ.ಮೆನನ್, ನಂತರ ಪಟೇಲರ ಕಾರ್ಯದರ್ಶಿಯಾಗಿ ಕೆಲಸ ಮಾಡಿದರು. ಬ್ರಿಟಿಷರಿಂದ ಭಾರತ ವರ್ಗಾವಣೆಯ ಮತ್ತು ವಿಭಜನೆಯ ನೀತಿನಿಯಮಗಳ ಪತ್ರವನ್ನು ಸಿದ್ಧಪಡಿಸಿದರು.) ರಾಜರ ಆಡಳಿತದ ರಾಜ್ಯಗಳ ಸಮಸ್ಯೆಗಳು 1946 ರ ಜುಲೈನಲ್ಲಿ ಸ್ವತಂತ್ರ ಭಾರತದ ಸೈನ್ಯದ ವಿರುದ್ಧ ನಿಲ್ಲಬಲ್ಲ ಯಾವುದೇ ರಾಜಪ್ರಭುತ್ವದ ರಾಜ್ಯವು ತನ್ನ (ಬಲಿಷ್ಠ) ಸೈನ್ಯವನ್ನು ಹೊಂದಿಲ್ಲವೆಂದು ನೆಹರು ಗಮನಸೆಳೆದಿದ್ದಾರೆ. ಸ್ವತಂತ್ರ ಭಾರತವು “ರಾಜರ ದೈವಿಕ ಹಕ್ಕು” ನೀತಿನ್ನು ಒಪ್ಪುವುದಿಲ್ಲವೆಂದು 1947 ರ ಜನವರಿಯಲ್ಲಿ ಅವರು ಹೇಳಿದರು, ಮತ್ತು ಮೇ 1947 ರಲ್ಲಿ, “ಸಂವಿಧಾನ ಸಭೆಯೊಂದನ್ನು ಸೇರಲು ನಿರಾಕರಿಸಿದ ಯಾವುದೇ ರಾಜಪ್ರಭುತ್ವದ ರಾಜ್ಯವನ್ನು ಶತ್ರು ರಾಜ್ಯವೆಂದು ಪರಿಗಣಿಸಲಾಗುತ್ತದೆ”, ಎಂದರು. ಭಾರತದ ಸಂವಿಧಾನದ ಕರಡು ತಯಾರಿಸುವಾಗ, ಆ ಸಮಯದಲ್ಲಿನ ಅನೇಕ ಭಾರತೀಯ ಮುಖಂಡರು (ನೆಹರೂ ಹೊರತುಪಡಿಸಿ) ಪ್ರತಿ ರಾಜ ಸಂಸ್ಥಾನವು ಅಥವಾ ಒಡಂಬಡಿಕೆಯ ರಾಜ್ಯವು “ಫೆಡರಲ್ ರಾಜ್ಯವಾಗಿ” ಸ್ವತಂತ್ರವಾಗಿರಲು ಅನುವು ಮಾಡಿಕೊಡಬೇಕು ಎಂಬ ನೀತಿಯ ಪರವಾಗಿದ್ದರು, ಇದು ಮೂಲತಃ ಭಾರತ ಸರ್ಕಾರ ಕಾಯಿದೆ (1935) ರ ಅನುಸಾರವಾಗಿತ್ತು. ಆದರೆ ಸಂವಿಧಾನದ ಕರಡು ರಚನೆಯು ಪ್ರಗತಿಯಾದಾಗ ಮತ್ತು ಗಣರಾಜ್ಯ ರಚಿಸುವ ಕಲ್ಪನೆಯು ನಿರ್ದಿಷ್ಠ ಆಕಾರವನ್ನು ತೆಗೆದುಕೊಂಡಿತು ಅದು ನೆಹರು ಪ್ರಯತ್ನದ ಕಾರಣ, ಎಲ್ಲಾ ರಾಜರ ರಾಜ್ಯಗಳು / ಒಡಂಬಡಿಕೆಯ ರಾಜ್ಯಗಳು ಭಾರತೀಯ ಗಣರಾಜ್ಯದೊಂದಿಗೆ ವಿಲೀನಗೊಳ್ಳುತ್ತವೆ ಎಂದು ನಿರ್ಧರಿಸಲಾಯಿತು. ನೆಹರೂ ಅವರ ಪುತ್ರಿ ಇಂದಿರಾ ಗಾಂಧಿಯವರು 1969 ರಲ್ಲಿ ರಾಷ್ಟ್ರಪತಿ ಆದೇಶ ಹೊರಡಿಸಿ ಎಲ್ಲಾ ರಾಜ್ಯದ ರಾಜರ ರಾಜತ್ವದ ಅಧಿಕಾರವನ್ನು ರದ್ದುಗೊಳಿಸಿದರು. ಆದರೆ ಇದು ಭಾರತದ ಸುಪ್ರೀಂ ಕೋರ್ಟಿನಿಂದ ತಿರಸ್ಕರಿಸಲ್ಪಟ್ಟಿತು. ಅಂತಿಮವಾಗಿ, ಸಂವಿಧಾನದ 26 ನೇ ತಿದ್ದುಪಡಿಯಿಂದ ಸರ್ಕಾರವು ಭಾರತದ ರಾಜಪ್ರಭುತ್ವದ ರಾಜ್ಯಗಳನ್ನು ರದ್ದುಪಡಿಸುವಲ್ಲಿ ಯಶಸ್ವಿಯಾಯಿತು. ನೆಹರು ಪ್ರಾರಂಭಿಸಿದ, ಈ ಸಂಸ್ಥಾನಗಳನ್ನು ಭಾರತದ ಪ್ರಜಾಪ್ರಭುತ್ದ ಆಡಳಿತದೊಳಗೆ ತರುವ ಪ್ರಕ್ರಿಯೆಯು' 1971 ರ ಅಂತ್ಯದ ವೇಳೆಗೆ ಅವರ ಮಗಳಿಂದ ಪೂರ್ಣಗೊಂಡಿತು. 1929ರ ಸ್ವಾತಂತ್ರ್ಯದ ಘೋಷಣೆ ಬ್ರಿಟಿಷ್ ಸಾಮ್ರಾಜ್ಯದೊಂದಿಗೆ ಎಲ್ಲ ಸಂಬಂಧಗಳಿಂದ ಸಂಪೂರ್ಣ ಮತ್ತು ಸ್ಪಷ್ಟವಾದ ವಿದಾಯವನ್ನು (ಬಿಡುಗಡೆ) ಹೊಂದಲು ಕಾಂಗ್ರೆಸ್ ಪಕ್ಷವು ನಿರ್ಧರಿಸಬೇಕು ಎಂದು ಒತ್ತಾಯಿಸಿದ ಮೊದಲ ನಾಯಕರಲ್ಲಿ ನೆಹರು ಕೂಡ ಒಬ್ಬರಾಗಿದ್ದರು. ಸ್ವಾತಂತ್ರ್ಯಕ್ಕಾಗಿ ಅವರ ನಿರ್ಣಯವನ್ನು 1927 ರಲ್ಲಿ ಕಾಂಗ್ರೆಸ್’ನ ಮದ್ರಾಸ್ ಅಧಿವೇಶನದಲ್ಲಿ ಗಾಂಧೀಜಿಯವರ ಟೀಕೆಯ ಹೊರತಾಗಿಯೂ ಅಂಗೀಕರಿಸಲಾಯಿತು (ಪೂರ್ಣ ಸ್ವರಾಜ್ಯ ಬೇಡಿಕೆಯ ಘೋಷಣೆಗೆ ಇನ್ನೂ ಕಾಲ ಪಕ್ವವಾಗಿಲ್ಲ ಎಂಬುದು ಗಾಂದೀಜಿಯವರ ಅಭಿಪ್ರಾಯವಾಗಿತ್ತು). ಆ ಸಮಯದಲ್ಲಿ ನೆಹರು ಅವರು ಪೂರ್ಣ ಸ್ವಾತಂತ್ರದ ಬಗ್ಗೆ ಒತ್ತಡ ಹಾಕಲು ಕಾಂಗ್ರೆಸ್ಸಿನ ಒಳಗಿನ ಒಂದು ಒತ್ತಡದ ಗುಂಪನ್ನು ರಚಿಸಿದರು. ಅದು “ಸ್ವಾತಂತ್ರ್ಯಕ್ಕಾಗಿ ಇಂಡಿಯಾ ಲೀಗ್” ಎಂಬ ಎಂಬ ಕೂಟ. [47] [48] 1928 ರಲ್ಲಿ, ಗಾಂಧೀಜಿಯವರು ನೆಹರು ಅವರ ಬೇಡಿಕೆಗಳಿಗೆ ಒಪ್ಪಿಕೊಂಡರು ಮತ್ತು ಬ್ರಿಟಿಷರಿಗೆ ಎರಡು ವರ್ಷಗಳಲ್ಲಿ ಭಾರತಕ್ಕೆ ಡೊಮಿನಿಯನ್ ಅಧಿಕಾರ ಸ್ಥಾನಮಾನ ನೀಡಲು ಕರೆಕೊಡುವ ನಿರ್ಣಯವನ್ನು ಪ್ರಸ್ತಾವಿಸಿದರು. ಗಡುವು ಪೂರೈಸಲು ಬ್ರಿಟಿಷರು ವಿಫಲವಾದರೆ, ಸಂಪೂರ್ಣ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಲು ಕಾಂಗ್ರೆಸ್ ಎಲ್ಲಾ ಭಾರತೀಯರಿಗೆ ಕರೆನೀಡುತ್ತದೆ ಎಂಬುದಕ್ಕೆ ನೆಹರು ಒಪ್ಪ್ಪಿದರು. ಆದರೆ ಬ್ರಿಟಿಷರಿಗೆ ನೀಡಿದ ಎರಡು ವರುಷದ ಸಮಯವನ್ನು ವಿರೋಧಿಸಿದ ನಾಯಕರಲ್ಲಿ ನೆಹರೂ ಒಬ್ಬರಾಗಿದ್ದರು - ಅವರು ಬ್ರಿಟಿಷರಿಂದ ತಕ್ಷಣದ ಕ್ರಮಗಳನ್ನು ಒತ್ತಾಯಿಸಲು ಗಾಂಧಜಿಯನ್ನು ಒತ್ತಾಯಿಸಿದರು. ಗಾಂಧಿಯವರು ಎರಡು ವರ್ಷಗಳಿಂದ ಒಂದು ಅವಧಿಗೆ ಸಮಯವನ್ನು ಕಡಿಮೆ ಮಾಡಿ ಮತ್ತಷ್ಟು ರಾಜಿ ಮಾಡಿಕೊಂಡರು. ಹೊಸ ನಿರ್ಣಯಕ್ಕೆ ಮತ ಚಲಾಯಿಸಲು ನೆಹರು ಒಪ್ಪಿಕೊಂಡರು. ಡೊಮಿನಿಯನ್ ಸ್ಥಾನಮಾನದ ಬೇಡಿಕೆಗಳನ್ನು ಬ್ರಿಟಿಷರು 1929 ರಲ್ಲಿ ತಿರಸ್ಕರಿಸಿದರು. 1929 ರ ಡಿಸೆಂಬರ್ 29 ರಂದು ಲಾಹೋರ್ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆಯನ್ನು ನೆಹರು ವಹಿಸಿಕೊಂಡರು ಮತ್ತು ಸಂಪೂರ್ಣ ಸ್ವಾತಂತ್ರ್ಯಕ್ಕಾಗಿ ಕರೆಕೊಡುವ ಯಶಸ್ವಿ ನಿರ್ಣಯವನ್ನು ಮಂಡಿಸಿದರು. ಸ್ವಾತಂತ್ರ್ಯದ ಘೋಷಣೆಯ ಕರಡು ಪ್ರತಿ (ಡ್ರಾಫ್ಟ್) ಭಾರತದ ಸ್ವಾತಂತ್ರ್ಯದ ಘೋಷಣೆಯ ಕರಡನ್ನು ನೆಹರೂ ಮಾಡಿದರು. ಅದು ಹೀಗಿತ್ತು(ಕರಡು:ತಿದ್ದುಪಡಿ ಮಾಡದ ಮೂಲ ಪ್ರತಿ): ಸ್ವಾತಂತ್ರ್ಯವನ್ನು ಹೊಂದಲು ಮತ್ತು ಅವರ ಶ್ರಮದ ಫಲವನ್ನು ಅನುಭವಿಸಲು ಮತ್ತು ಜೀವನದ ಅಗತ್ಯತೆಗಳನ್ನು ಹೊಂದಲು, ಅವರು ಜನರಿಗೆ ಅಭಿವೃದ್ಧಿಗಾಗಿ ಪೂರ್ಣ ಅವಕಾಶಗಳನ್ನು ಹೊಂದಲು ಸಾಧ್ಯವಾಗುವಂತೆ, ಇತರ ಜನರಂತೆ, ಭಾರತೀಯ ಜನರ ಪ್ರಶ್ನಾತೀತವಾದ ಹಕ್ಕಿದೆ ಎಂದು ನಾವು ನಂಬುತ್ತೇವೆ. ಯಾವುದೇ ಸರ್ಕಾರವು ಈ ಹಕ್ಕುಗಳ ಜನರನ್ನು ಹಿಂತೆಗೆದುಕೊಂಡು ಅವರನ್ನು ದಮನಮಾಡಿದರೆ ಜನರು ಅದನ್ನು ಬದಲಾಯಿಸುವ ಅಥವಾ ಅದನ್ನು ರದ್ದುಗೊಳಿಸುವುದಕ್ಕೆ ಮತ್ತಷ್ಟು ಹಕ್ಕನ್ನು ಹೊಂದಿದ್ದಾರೆ ಎಂದು ನಾವು ನಂಬುತ್ತೇವೆ. ಭಾರತದಲ್ಲಿ ಬ್ರಿಟಿಷ್ ಸರ್ಕಾರವು ಭಾರತೀಯ ಜನರ ಸ್ವಾತಂತ್ರ್ಯವನ್ನು ವಂಚಿತಗೊಳಿಸಿದ್ದು ಮಾತ್ರವಲ್ಲದೆ ಆ ಜನಸಾಮಾನ್ಯರ ಶೋಷಣೆಯ ಮೇಲೆ ತನ್ನನ್ನು ಅವಲಂಬಿಸಿಕೊಂಡಿದೆ ಮತ್ತು ಆರ್ಥಿಕವಾಗಿ, ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಭಾರತವನ್ನು ನಾಶಪಡಿಸಿದೆ. ಹಾಗಾಗಿ, ಭಾರತವು ಬ್ರಿಟಿಷ್ ಸಂಪರ್ಕದಿಂದ ಬೇರ್ಪಡಬೇಕು ಮತ್ತು ಪೂರ್ಣ ಸ್ವರಾಜ್ ಅಥವಾ ಸಂಪೂರ್ಣ ಸ್ವಾತಂತ್ರ್ಯವನ್ನು ಪಡೆಯಬೇಕು ಎಂದು ನಾವು ನಂಬುತ್ತೇವೆ. ಹೊಸ ವರ್ಷದ ಮುನ್ನಾದಿನದ 1929 ರ ಮಧ್ಯರಾತ್ರಿ, ನೆಹರು ಅವರು ಲಾಹೋರ್’ನಲ್ಲಿ ರಾವಿನದಿ ತೀರದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿದರು. “ಸ್ವಾತಂತ್ರ್ಯದ ಪ್ರತಿಜ್ಞೆಯನ್ನು ಓದಲಾಗಿದೆ, ಇದರಲ್ಲಿ ತೆರಿಗೆಯನ್ನು ತಡೆಹಿಡಿಯುವ ಸಿದ್ಧತೆ ಸೇರಿದೆ”. ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರ ಬೃಹತ್ ಕೂಟವನ್ನು ಅವರು ಈ ಘೋಷಣೆಯನ್ನು ಒಪ್ಪಿಕೊಂಡರೇ ಎಂದು ಕೇಳಲಾಯಿತು, ಮತ್ತು ಬಹುಪಾಲು ಜನರು ತಮ್ಮ ಕೈಗಳನ್ನು ಎತ್ತಿ ಅನುಮೋದನೆಯ ಒಪ್ಪಿಗೆಗೆ ಸಾಕ್ಷಿಯಾಗಿದ್ದರು. ಕೇಂದ್ರ ಮತ್ತು ಪ್ರಾಂತೀಯ ಶಾಸನಸಭೆಗಳ 172 ಭಾರತೀಯ ಸದಸ್ಯರು ಭಾರತೀಯ ಸಾರ್ವಜನಿಕರ ಭಾವನೆಗಳಿಗೆ ಅನುಗುಣವಾಗಿ ನಿರ್ಣಯಕ್ಕೆ ಬೆಂಬಲ ನೀಡಿ ರಾಜಿನಾಮೆ ಸಲ್ಲಿಸಿದರು. ಜನವರಿ 26 ರಂದು ಸ್ವಾತಂತ್ರ್ಯ ದಿನವೆಂದು ಆಚರಿಸಲು ಕಾಂಗ್ರೆಸ್ ಜನರನ್ನು ಕೇಳಿತು. ಭಾರತದ ಧ್ವಜವನ್ನು ಕಾಂಗ್ರೆಸ್’ನ ಸ್ವಯಂಸೇವಕರು, ರಾಷ್ಟ್ರೀಯವಾದಿಗಳು ಮತ್ತು ಸಾರ್ವಜನಿಕರು ಇವರಿಂದ ಸಾರ್ವಜನಿಕವಾಗಿ ಭಾರತದಾದ್ಯಂತ ಹಾರಿಸಲ್ಪಟ್ಟಿತು. ಸಾಮೂಹಿಕ ನಾಗರಿಕ ಅಸಹಕಾರಕ್ಕಾಗಿ ಯೋಜನೆಗಳು ನಡೆಯುತ್ತಿದ್ದವು. 1929 ರಲ್ಲಿ ಕಾಂಗ್ರೆಸ್ನ ಲಾಹೋರ್ ಅಧಿವೇಶನದ ನಂತರ, ನೆಹರೂ ಕ್ರಮೇಣ ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರಧಾನ ನಾಯಕನಾಗಿ ಹೊರಹೊಮ್ಮಿದರು. ಗಾಂಧಿಯವರು ಹೆಚ್ಚು ಆಧ್ಯಾತ್ಮಿಕ ಪಾತ್ರಕ್ಕೆ ಮರಳಿದರು. ಗಾಂಧಿಯವರು 1942 ರವರೆಗೆ ನೆಹರು ಅವರನು ತಮ್ಮ ರಾಜಕೀಯ ಉತ್ತರಾಧಿಕಾರಿಯನ್ನು ಅಧಿಕೃತವಾಗಿ ನೇಮಿಸಲಿಲ್ಲವಾದರೂ, 1930 ರ ದಶಕದ ಮಧ್ಯಭಾಗದಲ್ಲಿಯೇ ನೆಹರು ದೇಶಕ್ಕೆ ಗಾಂಧಿಯ ಸ್ವಾಭಾವಿಕ ಉತ್ತರಾಧಿಕಾರಿಯಾಗಿ ಪರಿಗಣಿಸಲ್ಪಟ್ಟಿದ್ದರು. ಅಹಿಂಸಾತ್ಮಕ ಅಸಹಕಾರ ಚಳುವಳಿ ಉಪ್ಪಿನ ಸತ್ಯಾಗ್ರಹ: ಬ್ರಿಟಿಷ್’ರಿಂದ ಉಪ್ಪು ತೆರಿಗೆಗೆ ಗುರಿಯಾಗಿದ ಕಾರಣ ಅದರ ವಿರುದ್ಧ ಸತ್ಯಾಗ್ರಹ ಮಾಡುವದರೊಂದಿಗೆ “ನಾಗರಿಕ ಅಸಹಕಾರ ಚಳುವಳಿಯನ್ನು ಪ್ರಾರಂಭಿಸುವ ಗಾಂಧಿಯವರ ಯೋಜನೆ ಬಗ್ಗೆ ನೆಹರು ಮತ್ತು ಕಾಂಗ್ರೆಸ್ನ ಹೆಚ್ಚಿನ ನಾಯಕರು ಆರಂಭದಲ್ಲಿ ಅದರ ಪರಿಣಾಮದ ಬಗ್ಗೆ ಸಂಶಯ ಪಟ್ಟಿದ್ದರು. (ಸಮುದ್ರದಲ್ಲಿಯಾಗಲಿ ಅಥವಾ ಬೇರೆ ವಿಧದಿಂದಲಾಗಲಿ ಬಾರತೀಯರು ಉಪ್ಪು ತಯಾರಿಸುವಂತಿರಲಿಲ್ಲ. ಅದು ಅಪರಾಧವೆಂಬ ಕಾನೂನು. ಉಪ್ಪನ್ನು ತಯಾರಿಸಿ ಕಾನೂನು ಭಂಗ ಮಡುವುದು – ಜೈಲಿಗೆ ಹೋಗುವುದು ಸತ್ಯಾಗ್ರಹ.) ಪ್ರತಿಭಟನೆಯು ಬಿಸಿ ಏರಿದ ನಂತರ, “ಉಪ್ಪಿನ ಸಂಕೇತದ ಶಕ್ತಿ”ಯನ್ನು ನೆಹರು ಅವರು ಅರಿತುಕೊಂಡರು. ನೆಹರು ಈ ಪ್ರತಿಭಟನೆಯ ಅಭೂತಪೂರ್ವ ಜನಪ್ರಿಯ ಪ್ರತಿಕ್ರಿಯೆಯ ಬಗ್ಗೆ ಹೀಗೆ ಪ್ರತಿಕ್ರಿಯಿಸಿದರು: "ಒಂದು ವಸಂತಕಾಲವು ಇದ್ದಕ್ಕಿದ್ದಂತೆ ಹೊರಹೊಮ್ಮಿರುವಂತೆ ಕಾಣುತ್ತದೆ". [57] ನೆಹರು ರಾಯಪುರಕ್ಕೆ ಅಲಹಾಬಾದ್’ನಿಂದ ಬಂದ ರೈಲಿನ ಸಂದರ್ಭದಲ್ಲಿ 14 ಏಪ್ರಿಲ್ 1930 ರಂದು ಅವರನ್ನು ಬಂಧಿಸಲಾಯಿತು. ಅದಕ್ಕೆ ಮೊದಲು ಅವರು ಒಂದು ದೊಡ್ಡ ಸಭೆ ನಡೆಸಿ ದೊಡ್ಡ ಮೆರವಣಿಗೆಯನ್ನು ನಡೆಸಿದ ನಂತರ, ಸರ್ಕಾರದಿಂದ ನಿóಷೇಧಿಸಲ್ಪಟ್ಟ (ಕಾಂಟ್ರಾಬ್ಯಾಂಡ್) ಉಪ್ಪನ್ನು ಸಂಭ್ರಮೋತ್ಸವವದಿಂದ ಬಹಿರಂಗವಾಗಿ ತಯಾರಿಸಿದರು. “ಉಪ್ಪು ಕಾನೂನಿನ” ಉಲ್ಲಂಘನೆಯ ಕಾರಣ ಅವರನ್ನು ಬಂಧಿಸಲಾಯಿತು, ಜೈಲು ಗೋಡೆಗಳ ಹಿಂದೆಯೇ ಅವರನ್ನು ಸಂಕ್ಷಿಪ್ತವಾಗಿ ವಿಚಾರಣೆ ನೆಡೆದರು ಮತ್ತು ಅವರಿಗೆ ಆರು ತಿಂಗಳ ಸೆರೆವಾಸ ವಿಧಿಸಲಾಯಿತು. ನೆಹರು ಅವರು ಜೈಲಿನಲ್ಲಿ ಇದ್ದಾಗ, ಗಾಂಧೀಜಿ ಅನುಪಸ್ಥತಿಯಲ್ಲಿ ಗಾಂಧಿ ಅವರನ್ನು ತಮ್ಮ ಉತ್ತರಾದಿಕಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಿದರು, ಆದರೆ ಗಾಂಧಿಯವರು ಅದನ್ನು ನಿರಾಕರಿಸಿದರು, ಮತ್ತು ನೆಹರು ತನ್ನ ತಂದೆಯವರನ್ನು ಉತ್ತರಾಧಿಕಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ನಾಮಕರಣ ಮಾಡಿದರು. ನೆಹರೂ ಅವರ ಬಂಧನದಿಂದಾಗಿ ನಾಗರಿಕ ಅಸಹಕಾರ ಚಳುವಳಿ ಹೊಸ ಗತಿ ಪಡೆದುಕೊಂಡು ತೀವ್ರವಾಯಿತು, ಮತ್ತು ಬಂಧನಗಳು ನೆಡೆದವು, ಜನಸಮೂಹದ ಮೇಲೆ ಗುಂಡುಹಾರಿಸಲಾಯಿತು ಮತ್ತು ಲಾಠಿ ಛಾರ್ಜಗಳು ಎಲ್ಲೆಡೆಯೂ ಸಾಮಾನ್ಯ ಘಟನೆಗಳಾಗಿ ನೆಡೆಯಿತು. ಉಪ್ಪಿನ ಸತ್ಯಾಗ್ರಹದ ಯಶಸ್ಸು ಉಪ್ಪಿನ ಸತ್ಯಾಗ್ರಹವು ಪ್ರಪಂಚದ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು. ಇಂಡಿಯನ್, ಬ್ರಿಟಿಷ್, ಮತ್ತು ಪ್ರಪಂಚದ ಅಭಿಪ್ರಾಯಗಳು ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಪಕ್ಷದ ಹಕ್ಕುಗಳ ನ್ಯಾಯಸಮ್ಮತತೆಯನ್ನು ಹೆಚ್ಚಿಸಲು ಪ್ರಾರಂಭಿಸಿವೆ. ನೆಹರು ಅವರು ಉಪ್ಪಿನ ಸತ್ಯಾಗ್ರಹವನ್ನು ಗಾಂಧಿಯವರೊಂದಿಗಿನ ಅವರ ಸಂಬಂಧದ ಉನ್ನತ-ಚಿನ್ಹೆಯ ಗುರುತು ಎಂದು ಪರಿಗಣಿಸಿದರು, [60] ಮತ್ತು ಭಾರತೀಯರ ವರ್ತನೆಗಳನ್ನು ಬದಲಿಸುವಲ್ಲಿ ಇದು ಶಾಶ್ವತವಾದ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಭಾವಿಸಿದರು: “ಖಂಡಿತ ಈ ಚಳುವಳಿ ಬ್ರಿಟಿಷ್ ಸರಕಾರದ ಮೇಲೆ ಭಾರಿ ಒತ್ತಡವನ್ನು ಬೀರಿತು ಮತ್ತು ಸರ್ಕಾರಿ ಯಂತ್ರಗಳನ್ನು ಬೆಚ್ಚಿಬೀಳಿಸಿತ್ತು. ಆದರೆ ಇದಕ್ಕೆ ನನ್ನ (ನೆಹರು) ಪ್ರಾಮುಖ್ಯತೆ, ನಮ್ಮ ಜನರಿಗೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಜನರ ಮೇಲೆ ಬೀರಿದ ಪರಿಣಾಮ. ... ಅಸಹಕಾರ ಅವರನ್ನು ಕಿರಿದಾದಿಂದ ಕೂಪದಿಂದ ಹೊರಗೆ ಎಳೆದುಕೊಂಡು ಸ್ವಾಭಿಮಾನ ಮತ್ತು ಸ್ವಾವಲಂಬನೆಯನ್ನು ನೀಡಿತು. ... ಅವರು ಧೈರ್ಯದಿಂದ ವರ್ತಿಸಿದರು ಮತ್ತು ಅನ್ಯಾಯದ ದಬ್ಬಾಳಿಕೆಗೆ ಸುಲಭವಾಗಿ ಒಪ್ಪಲಿಲ್ಲ; ಅವರ ದೃಷ್ಟಿಕೋನವು ವಿಸ್ತಾರವಾಯಿತು ಮತ್ತು ಅವರು ಭಾರತವನ್ನು ಒಂದು ಘಟಕವಾಗಿ ಸ್ವಲ್ಪಮಟ್ಟಿಗೆ ಯೋಚಿಸಲಾರಂಭಿಸಿದರು. ... ಇದು ಗಮನಾರ್ಹ ಬದಪಾವಣೆಯಾಗಿತ್ತು. ಇದರ ಕೀರ್ತಿ ಗಾಂಧಿಯವರ ನಾಯಕತ್ವದ ಕಾಂಗ್ರೆಸ್’ಗೆ ಅದರ ಕೀರ್ತಿ ಸೇರಬೇಕು. ಆಧುನಿಕ ಭಾರತದ ಶಿಲ್ಪಿ (ಭಾರತದ ನಿರ್ಮಾತೃವಾಗಿ) ಭವಿಷ್ಯ ಭಾರತದ ಸಂವಿಧಾನದಲ್ಲಿ ಪ್ರಜಾಪ್ರಭುತ್ವದ ಮತ್ತು ಸಾಮಾಜಿಕ ನ್ಯಾಯದ ತಳಹದಿ: 1929 ರಲ್ಲಿ ಕಾಂಗ್ರೆಸ್ಸಿನ ನೀತಿಗಳನ್ನು ಮತ್ತು ಅವರ ನಾಯಕತ್ವದಲ್ಲಿ ಭವಿಷ್ಯದ ಭಾರತ-ರಾಷ್ಟ್ರವನ್ನು ನೆಹರು ವಿವರಿಸಿದರು. ಅವರು ಕಾಂಗ್ರೆಸ್ಸಿನ ಉದ್ದೇಶಗಳು ಧರ್ಮದ ಸ್ವಾತಂತ್ರ್ಯ, ಸಂಘಗಳನ್ನು ರೂಪಿಸುವ ಹಕ್ಕನ್ನು, ಆಲೋಚನೆಯ ಅಭಿವ್ಯಕ್ತಿ ಸ್ವಾತಂತ್ರ್ಯ, ಜಾತಿ, ಬಣ್ಣ, ಮತ ಅಥವಾ ಧರ್ಮದ ವ್ಯತ್ಯಾಸವಿಲ್ಲದೆ ಪ್ರತಿ ವ್ಯಕ್ತಿಗೂ ಸಮಾನತೆಯ ಕಾನೂನು, ಪ್ರಾದೇಶಿಕ ಭಾಷೆಗಳು ಮತ್ತು ಸಂಸ್ಕೃತಿಗಳಿಗೆ ರಕ್ಷಣೆ, ರೈತರು ಮತ್ತು ಕಾರ್ಮಿಕರ ಹಿತಾಸಕ್ತಿಗಳು, ಅಸ್ಪೃಶ್ಯತೆ ನಿರ್ಮೂಲನೆ, ವಯಸ್ಕ ಮತದಾನದ ಪರಿಚಯ, ನಿಷೇಧ ಹೇರುವುದು, ಕೈಗಾರಿಕೆಗಳ ರಾಷ್ಟ್ರೀಕರಣ, ಸಮಾಜವಾದ, ಮತ್ತು ಜಾತ್ಯತೀತ ಭಾರತವನ್ನು ಸ್ಥಾಪಿಸುವುದು. ಈ ಎಲ್ಲಾ ಉದ್ದೇಶಗಳು 1929-31ರಲ್ಲಿ ನೆಹರುರಿಂದ ರಚಿಸಲ್ಪಟ್ಟ "ಮೂಲಭೂತ ಹಕ್ಕುಗಳು ಮತ್ತು ಆರ್ಥಿಕ ನೀತಿ" ಯ ನಿರ್ಣಯದ ಮೂಲವು ರೂಪಿಸಿವೆ ಮತ್ತು ಅವು ಗಾಂಧಿಯವರ ನಾಯಕತ್ವದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯಿಂದ ಅನುಮೋದಿಸಲ್ಪಟ್ಟವು. ಸಮಾಜವಾದದ ಗುರಿಯನ್ನು ಸಾಧಿಸುವುದು ಅತ್ಯಂತ ಕಷ್ಟಕರವಾಗಿತ್ತು. ನೆಹರು ಅವರನ್ನು ಬಲಪಂಥೀಯ ಕಾಂಗ್ರೆಸ್ ಸದಸ್ಯರಾದ ವಲ್ಲಭಭಾಯಿ ಪಟೇಲ್, ರಾಜೇಂದ್ರ ಪ್ರಸಾದ್ ಮತ್ತು ಸಿ. ರಾಜಗೋಪಾಲಾಚಾರಿ ಅವರು ವಿರೋಧಿಸಿದರು. ನೆಹರು ಅವರಿಗೆ ಎಡಪಂಥೀಯ ಕಾಂಗ್ರೆಸ್ ಸದಸ್ಯರಾದ ಮೌಲಾನಾ ಆಜಾದ್ ಮತ್ತು ಸುಭಾಷ್ ಚಂದ್ರ ಬೋಸ್ ಅವರ ಬೆಂಬಲವಿತ್ತು. 1936 ರಲ್ಲಿ ಕಾಂಗ್ರೆಸ್ ಅಧ್ಯಕ್ಷತೆಯಿಂದ ಡಾ.ಪ್ರಸಾದರನ್ನು ಹೊರಗಿಡಲು ಈ ಮೂವರು ಸೇರಿಕೊಂಡರು. ನೆಹರೂ ಅವರ ಸ್ಥಾನದಲ್ಲಿ ಚುನಾಯಿತರಾದರು ಮತ್ತು ಎರಡು ವರ್ಷಗಳ ಕಾಲ (1936-37) ಅಧ್ಯಕ್ಷರಾದರು. ನಂತರ ಅವರ ಸಮಾಜವಾದಿ ಸಹೋದ್ಯೋಗಿಗಳಾದ ಬೋಸ್ (1938-39) ಮತ್ತು ಆಜಾದ್ (1940-46) ಅವರಿಂದ ಯಶಸ್ವಿಯಾದರು. ಭಾರತೀಯ ರಾಜಕೀಯದ ಮುಖ್ಯವಾಹಿನಿಯಿಂದ ಬೋಸರ ನಿರ್ಗಮನದ ನಂತರ (ಬ್ರಿಟಿಷರನ್ನು ಭಾರತದಿಂದ ಹೊರಗೆ ಓಡಿಸುವಲ್ಲಿ ಹಿಂಸಾಚಾರಕ್ಕೆ ನೀಡುವ ಬೆಂಬಲದಿಂದಾಗಿ ಬೋಸರು ಪ್ರತ್ಯೇಕವಾದರು,) ಸಮಾಜವಾದಿಗಳು ಮತ್ತು ಸಂಪ್ರದಾಯವಾದಿಗಳ ನಡುವಿನ ಅಧಿಕಾರದ ಹೋರಾಟ ಸಮತೋಲಿತವಾಗಿತ್ತು.ಆದರೆ, ಸರ್ದಾರ್ ಪಟೇಲ್ 1950 ರಲ್ಲಿ ನಿಧನರಾದರು, ಆಗ ನೆಹರೂ ಅವರು ಉಳಿದಿರುವ ಏಕೈಕ ರಾಷ್ಟ್ರೀಯ ನಾಯಕನಾಗಿದ್ದರು ಮತ್ತು ನೆಹರು ಅವರ ಹಲವು ಮೂಲಭೂತ ನೀತಿಗಳನ್ನು ಯಾರೂ ಅಡ್ಡಿಪಡಿಸದೆಯೇ ಇದ್ದುದರಿಂದ ನೆಹರೂಗೆ ಅವನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಯಿತು.ಭಾರತದ ಸಂಪ್ರದಾಯಶೀಲ ಬಲಪಂಥೀಯ ಕಾಂಗ್ರೆಸ್ (ಭಾರತದ ಮೇಲ್ವರ್ಗದ ಗಣ್ಯರು) ಅವರು ಸಮಾಜವಾದಿಗಳ ವಿರುದ್ಧ 1969 ರಲ್ಲಿ ನಡೆದ ದೊಡ್ಡ ಭಿನ್ನಾಭಿಪ್ರಾಯ ಕಾಂಗ್ರಸ್ಸನ್ನು ವಿಭಜಿಸಿತು. ಆಗ ನೆಹರುರ ಮಗಳು ಇಂದಿರಾ ಗಾಂಧಿಯವರು ತುರ್ತುಪರಿಸ್ಥಿತಿಯ ಪರಿಸ್ಥಿತಿಯಲ್ಲಿ ಅವರು ಭಾರತದ ಸಂವಿಧಾನದ 42 ನೇ ತಿದ್ದುಪಡಿಯಿಂದ (1976) ತನ್ನ ತಂದೆಯ ಕನಸನ್ನು ಪೂರೈಸಲು ಸಮರ್ಥರಾದರು, ಈ ಮೂಲಕ ಭಾರತವು ಅಧಿಕೃತವಾಗಿ "ಸಮಾಜವಾದಿ" "ಜಾತ್ಯತೀತ".ಎಂದು ಆಯಿತು. ಆ ನೀತಿಗೆ ಅನುಸರಿಸಿ ಭಾರತದ ಆರ್ಥಿಕ ಭದ್ರತೆಗೆ ಕಾರಣವಾದ ಬ್ಯಾಂಕ್‍ಗಳ ರಾಷ್ಟ್ರೀಕರಣ , ಜೀವವಿಮೆ ರಾಷ್ಟ್ರೀಕರಣ, ರಾಜಧನ ರದ್ದತಿ - ಬಡವರಿಗಾಗಿ 20 ಅಂಶದ ಕಾರ್ಯಕ್ರಮ ಇತ್ಯಾದಿಯನ್ನು ಜಾರಿಗೆ ತಂದರು. ಭಾರತದ ವಿದೇಶಾಂಗ ನೀತಿಯ ರೂವಾರಿ; 1938 ರಲ್ಲಿಯೇ ರಾಷ್ಟ್ರೀಯ ಯೋಜನಾ ಆಯೋಗ ರಚನೆ: ಕಾಂಗ್ರೆಸ್ಸಿನ ಸಾಮಾನ್ಯ ಕಾರ್ಯದರ್ಶಿಯಾಗಿ ನೆಹರೂ ಅವರ ಎರಡನೆಯ ಅವಧಿಯಲ್ಲಿ, ಅವರು ಭಾರತದ ವಿದೇಶಿ ನೀತಿ ಬಗ್ಗೆ ಕೆಲವು ನಿರ್ಣಯಗಳನ್ನು ಪ್ರಸ್ತಾಪಿಸಿದರು. ಆ ಕಾಲದ ನಂತರ, ಯಾವುದೇ ಭವಿಷ್ಯದ ಭಾರತೀಯ ರಾಷ್ಟ್ರದ ವಿದೇಶಾಂಗ ನೀತಿಯನ್ನು ರೂಪಿಸುವಲ್ಲಿ ಅವರಿಗೆ ಪೂರ್ಣ ಸ್ವಾತಂತ್ರ್ಯವನ್ನು (ಕಾರ್ಟೆ ಬ್ಲಾಂಚನ್ನು) ನೀಡಿದರು. ಅವರು ವಿಶ್ವದಾದ್ಯಂತ ಸರ್ಕಾರಗಳೊಂದಿಗೆ ಉತ್ತಮ ಸಂಬಂಧವನ್ನು ಬೆಳೆಸಿದರು. ಪ್ರಪಂಚವು ಫ್ಯಾಸಿಸಮ್’ನ ಬೆದರಿಕೆಗೆ ಒಳಗಾದ ಸಮಯದಲ್ಲಿ ಅವರು ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯದ ಕಡೆಗೆ ಭಾರತವನ್ನು ದೃಢವಾಗಿ ಇರಿಸಿದರು. ಭವಿಷ್ಯದ ಭಾರತದ ಆರ್ಥಿಕತೆಯನ್ನು ಯೋಜಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಯಿತು. ಇಂಥ ನೀತಿಗಳನ್ನು ರಚಿಸುವಲ್ಲಿ ಸಹಾಯ ಮಾಡಲು ಅವರು 1938 ರಲ್ಲಿ ರಾಷ್ಟ್ರೀಯ ಯೋಜನಾ ಆಯೋಗವನ್ನು ನೇಮಿಸಿದರು. ಆದಾಗ್ಯೂ, ನೆಹರು ಮತ್ತು ಅವರ ಸಹೋದ್ಯೋಗಿಗಳು ರಚಿಸಿದ ಅನೇಕ ಯೋಜನೆಗಳು 1947 ರಲ್ಲಿ ಭಾರತದ ಅನಿರೀಕ್ಷಿತ ವಿಭಜನೆಯಾದಾಗ ಕೃತಿಗೆ ಬರಲಾರದೆ ಅಪೂರ್ಣವಾದವು. 1930 ರಲ್ಲಿ ಚುನಾವಣಾ ರಾಜಕೀಯ ಮಾರ್ಕ್ಸ್‍ವಾದದ ಬಗೆಗೆ ಭ್ರಮನಿರಸನ:1936 ರಲ್ಲಿ ನೆಹರು ಅವರು ಯೂರೋಪಿಗೆ ಭೇಟಿ ನೀಡಿದಾಗ, ತಮ್ಮ ರಾಜಕೀಯ ಮತ್ತು ಆರ್ಥಿಕ ಚಿಂತನೆಯು ನಿಂತ ನೀರಿನಂತಿದೆ ಎಂದು ಅರಿವಾಯಿತು. ಮಾರ್ಕ್ಸಿಸಮ್ ಮತ್ತು ಅವರ ಸಮಾಜವಾದಿ ಚಿಂತನೆಯ ಬಗೆಗಿನ ಅವರ ನಿಜವಾದ ಆಸಕ್ತಿ ಆ ಪ್ರವಾಸದಿಂದ ಉದ್ಭವಿಸಿತು. ಜೈಲಿನಲ್ಲಿ ಅವರು ನಂತರದ ದಿನಗಳಲ್ಲಿ ಕಳೆದ ದಿನಗಳು, ಅವರಿಗೆ ಮಾರ್ಕ್ಸ್ವಾದವನ್ನು ಹೆಚ್ಚು ಆಳವಾಗಿ ಅಧ್ಯಯನ ಮಾಡಲು ನೆರವಾದವು. ಮಾರ್ಕ್ಸ್ ವಾದದ ಚಿಂತನೆಗಳಲ್ಲಿ ಆಸಕ್ತಿ ಹೊಂದಿದರೂ, ಅದರ ಕೆಲವು ಕಾರ್ಯವಿಧಾನಗಳನ್ನು ಅನುಸರಿಸಲು ಹಿಮ್ಮೆಟ್ಟುವಂತಾಯಿತು., ಅವರು ಸ್ವತಃ ಕಾರ್ಲ್ ಮಾರ್ಕ್ಸ ಬರಹಗಳನ್ನು ಪೂಜ್ಯಗ್ರಂಥದಂತೆ ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಿರ್ಣಯಿಸಿದರು. ಅಂದಿನಿಂದಲೂ, ಅವರ ಆರ್ಥಿಕ ಚಿಂತನೆಯ ಗಜಕಡ್ಡಿಯು ಭಾರತೀಯ ಪರಿಸ್ಥಿತಿಗಳಿಗೆ ಅಗತ್ಯವಿದ್ದಲ್ಲಿ ಹೊಂದುವಂತೆ ಮಾತ್ರಾ ಮಾರ್ಕ್ಸ್‍ವಾದಿಯಾಗಿದ್ದು, ಆ ವಾದ ಅಲ್ಲಿಯೇ ಉಳಿಯಿತು. 1935 ರ ಅಧಿಯಮದಂತೆ ಪ್ರಾಂತೀಯ ಚುನಾಯಿತ ಸರ್ಕಾರಗಳ ರಚನೆ:ನೆಹರೂ ನೇತೃತ್ವದ ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿತು ಮತ್ತು ಒಕ್ಕೂಟದ ಯೋಜನೆಯಡಿಯಲ್ಲಿ ಅಧಿಕಾರವನ್ನು ಸ್ವೀಕರಿಸಿದಾಗ, ಗಾಂಧಿಯವರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ನೆಹರೂರವರ ಆಂದೋಲನದ ಬಗೆಗೆ ಗಾಂಧಿಯವರು ಅಸಮ್ಮತಿ ವ್ಯಕ್ತಪಡಿಸಲಿಲ್ಲ, ಆದರೆ ಅವರು ರಾಜೀನಾಮೆ ನೀಡಿದ್ದರಿಂದ, ಭಾರತೀಯರೊಂದಿಗಿನ ಅವರ ಜನಪ್ರಿಯತೆಯು ಚುನಾವಣೆಯಲ್ಲಿ ಪಕ್ಷದಲ್ಲಿ ತಮ್ಮ ಸದಸ್ಯತ್ವದಿಂದ ಪ್ರಭಾವಿಸುವುದನ್ನು ನಿಲ್ಲಿಸಿತು. ಪ್ರಾಂತೀಯ ಸ್ವಾಯತ್ತತೆ (1935 ರ ಭಾರತ ಸರ್ಕಾರದ ಅಧಿನಿಯಮದಡಿಯಲ್ಲಿ) ಪ್ರಾಂತ್ಯದ ಸ್ವಾಯತ್ತತೆಯನ್ನು ಜಾರಿಗೊಳಿಸಿದ ನಂತರ ಚುನಾವಣೆಗಳು ನೆಡೆದು ಅದರಲ್ಲಿ ಬಹುಪಾಲು ಪ್ರಾಂತ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಾಗ, ನೆಹರುರ ಜನಪ್ರಿಯತೆ ಮತ್ತು ಅಧಿಕಾರವು ಸಾಟಿಯಿಲ್ಲದವು ಎಮದು ರುಜುವಾತಾಯಿತು. ಮುಹಮ್ಮದ್ ಅಲಿ ಜಿನ್ನಾರವರ ಅಡಿಯಲ್ಲಿ ಮುಸ್ಲಿಮ್ ಲೀಗ್ (ಜಿನ್ನಾ- ಪಾಕಿಸ್ತಾನದ ಸೃಷ್ಟಿಕರ್ತರಾಗಲು ಕಾರಣರು) ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಕಂಡಿತು. ಇದರಿಂದ ಭಾರತದಲ್ಲಿ ಮುಖ್ಯವಾಗಿ ಎರಡು ಪಕ್ಷಗಳು ಮಾತ್ರಾ ಇವೆ; ಅವು ಬ್ರಿಟಿಷ್ ರಾಜ್ ಮತ್ತು ಕಾಂಗ್ರೆಸ್ ಎಂದು ನೆಹರೂ ಘೋಷಿಸಿದರು. ಭಾರತೀಯ ರಾಜಕೀಯದಲ್ಲಿ ಮುಸ್ಲಿಂ ಲೀಗ್ ಮೂರನೆಯ ಮತ್ತು "ಸಮಾನ ಪಾಲುದಾರ" ಎಂಬ ಜಿನ್ನಾ ಹೇಳಿಕೆಗಳು ವ್ಯಾಪಕವಾಗಿ ತಿರಸ್ಕರಿಸಲ್ಪಟ್ಟವು. ಮೌಲಾನಾ ಆಜಾದರನ್ನು ಭಾರತೀಯ ಮುಸ್ಲಿಮರ ಮುಂಚೂಣಿ ಮುಖಂಡನಾಗಿ ನೇಮಕ ಮಾಡಲು ನೆಹರು ಆಶಿಸಿದರು, ಆದರೆ ಇದನ್ನು ಗಾಂಧಿಯವರು ಅಲಕ್ಷಿಸಿದರು, ಅವರು ಜಿನ್ನಾರನ್ನು ಭಾರತೀಯ ಮುಸ್ಲಿಮರ ಧ್ವನಿಯೆಂಬುದನ್ನು ಮುಂದುವರಿಸಿದರು. ವಿಶ್ವ ಸಮರ- II ಮತ್ತು ಕ್ವಿಟ್ ಇಂಡಿಯಾ ಚಳುವಳಿ 2 ನೇ ವಿಶ್ವ ಯುದ್ಧ ಪ್ರಾರಂಭವಾದಾಗ, ವೈಸ್ರಾಯ್ ಲಿನ್ಲಿತ್ಗೊವ್ ಅವರು ಏಕಪಕ್ಷೀಯವಾಗಿ ಭಾರತವು ಬ್ರಿಟನ್’ನಿನ ಪಕ್ಷದಲ್ಲಿ ಯುದ್ಧಮಾಡುವುದು ಎಂದರು. ಅವರು ಚುನಾಯಿತ ಭಾರತೀಯ ಪ್ರತಿನಿಧಿಗಳನ್ನು ಸಂಪರ್ಕಿಸದೆ ನಿರ್ಣಯ ತೆಗೆದುಕೊಂಡರು. ನೆಹರು ಚೀನಾಕ್ಕೆ ನೀಡಿದ ಭೇಟಿಯನ್ನು ಮೊಟಕುಗೊಲಿಸಿ ಬಾರತಕ್ಕೆ ಹಿಂದಿರುಗಿದರು. ನೆಹರೂ, "ಪ್ರಜಾಪ್ರಭುತ್ವ ಮತ್ತು ಫ್ಯಾಸಿಸಮ್ ನಡುವಿನ ಸಂಘರ್ಷದಲ್ಲಿ, ನಮ್ಮ ಸಹಾನುಭೂತಿಗಳು ಅನಿವಾರ್ಯವಾಗಿ ಪ್ರಜಾಪ್ರಭುತ್ವದ ಬದಿಯಲ್ಲಿರಬೇಕು .... ಭಾರತವು ಈ ವಿಷಯದಲ್ಲಿ ತನ್ನ ಸಂಪೂರ್ಣ ಪಾತ್ರವನ್ನು ತೊಡಗಿಸಲು ಮತ್ತು ತನ್ನ ಎಲ್ಲಾ ಸಂಪನ್ಮೂಲಗಳನ್ನು ಅದಕ್ಕೆ ಹಾಕಲು ನಾನು ಇಷ್ಟಪಡುತ್ತೇನೆ, ಅದು ಹೊಸ ವ್ಯವಸ್ಥೆಗೆ ದಾರಿಯಾಗಬೇಕು." ಎಂದು ಘೋಷಿಸಿದರು. ಹೆಚ್ಚಿನ ವಿವೇಚನೆಯ ನಂತರ, ನೆಹರೂ ನೇತೃತ್ವದ ಕಾಂಗ್ರೆಸ್ ಪಕ್ಷವು ಬ್ರಿಟಿಷ್ ಸರ್ಕಾರಕ್ಕೆ ಸಹಕಾರ ನೀಡಲಿದೆ ಆದರೆ ಕೆಲವು ಷರತ್ತುಗಳೊಂದಿಗೆ ಎಂದು ತಿಳಿಸಿತು. ಮೊದಲನೆಯದಾಗಿ, ಯುದ್ಧದ ನಂತರ ಭಾರತಕ್ಕೆ ಪೂರ್ಣ ಸ್ವಾತಂತ್ರ್ಯ ನೀಡುವ ಭರವಸೆಯನ್ನು ಬ್ರಿಟನ್ ನೀಡಬೇಕು ಮತ್ತು ಹೊಸ ಸಂವಿಧಾನವನ್ನು ರಚಿಸುವ ಒಂದು ಸಂವಿಧಾನ ಸಭೆಯನ್ನು ರಚಿಸಲು ಚುನಾವಣೆಗೆ ಅನುಮತಿಸಬೇಕು; ಎರಡನೆಯದು, ಭಾರತೀಯ ಸೇನಾಪಡೆಯು ಬ್ರಿಟಿಷ್ ಕಮಾಂಡರ್-ಇನ್-ಚೀಫ್’ನ ಅಡಿಯಲ್ಲಿಯೇ ಇದ್ದರೂ, ಭಾರತೀಯರನ್ನು ತಕ್ಷಣವೇ ಕೇಂದ್ರ ಸರ್ಕಾರದಲ್ಲಿ ಸೇರಿಸಿಕೊಳ್ಳಬೇಕು; ಮತ್ತು ಅಧಿಕಾರ ಮತ್ತು ಜವಾಬ್ದಾರಿಯನ್ನು ಹಂಚಿಕೊಳ್ಳಲು ಅವಕಾಶವನ್ನು ನೀಡಬೇಕು. ನೆಹರು ಅವರು ಲೆನ್ಲಿತ್ಗೋವ ಅವರಿಗೆ ಬೇಡಿಕೆಗಳನ್ನು ಮಂಡಿಸಿದಾಗ, ಅವರು ಅದನ್ನುನ್ನು ತಿರಸ್ಕರಿಸುವ ಆಯ್ಕೆ ಮಾಡಿದರು. ಇದರಿಂದ ಪರಿಸ್ಥತಿ ಕಗ್ಗಂಟು ಮಟ್ಟಕ್ಕೆ ತಲುಪಿತು. "ಅದೇ ಹಳೆಯ ಆಟವನ್ನು ಪುನಃ ಆಡಲಾಗುತ್ತದೆ", ಎಂದು ನೆಹರು ಗಾಂಧಿಗೆ ಕಠೋರವಾಗಿ ಬರೆದಿದ್ದಾರೆ, "ಹಿನ್ನೆಲೆ ಒಂದೇ ಆಗಿರುತ್ತದೆ, ವಿವಿಧ ಉಪಭಾಷೆಗಳು ಒಂದೇ ಆಗಿರುತ್ತವೆ ಮತ್ತು ನಟರು (ಪಾತ್ರಧಾರಿಗಳು) ಒಂದೇ ಆಗಿರುತ್ತವೆ ಮತ್ತು ಫಲಿತಾಂಶಗಳು ಒಂದೇ ಆಗಿರಬೇಕು". 23 ಅಕ್ಟೋಬರ್ 1939 ರಂದು, ಕಾಂಗ್ರೆಸ್ ವೈಸ್ರಾಯ್ ಅವರ ವರ್ತನೆಗಳನ್ನು ಖಂಡಿಸಿತು ಮತ್ತು ಪ್ರತಿಭಟನೆಯಾಗಿ ರಾಜೀನಾಮೆ ನೀಡಲು ವಿವಿಧ ಪ್ರಾಂತ್ಯಗಳಲ್ಲಿ ಕಾಂಗ್ರೆಸ್ ಸಚಿವಾಲಯಗಳನ್ನು ಆಹ್ವಾನಿಸಿತು (ಅನೇಕ ಪ್ರಾಂತ್ಯಗಳಲ್ಲಿ ಕಾಂಗ್ರಸ್ಸಿನ ಚುನಾಯಿತ ಸರ್ಕಾರ ಇತ್ತು). ಈ ನಿರ್ಣಾಯಕ ಘೋಷಣೆಗೆ ಮುಂಚಿತವಾಗಿ, ಜಿನ್ನಾ ಮತ್ತು ಮುಸ್ಲಿಂ ಲೀಗ್’ನ್ನು ಪ್ರತಿಭಟನೆಯಲ್ಲಿ ಸೇರಲು ನೆಹರೂ ಆಗ್ರಹಿಸಿದರು ಆದರೆ ಅದಕ್ಕೆ ಅವರು (ಜಿನ್ನಾ ಮತ್ತು ಲೀಗ್) ನಿರಾಕರಿಸಿತು. ಪಾಕಿಸ್ತಾನ ನಿರ್ಣಯ ಮಾರ್ಚ್ 1940 ರಲ್ಲಿ ಜಿನ್ನಾ "ಪಾಕಿಸ್ತಾನದ ನಿರ್ಣಯ" ಎಂದು ಕರೆಯಲ್ಪಡುವ ನಿರ್ಣಯವನ್ನು ಜಾರಿಗೆ ತಂದರು, ‘ರಾಷ್ಟ್ರ’ ದ ಯಾವುದೇ ವ್ಯಾಖ್ಯಾನದ ಪ್ರಕಾರ ಮುಸ್ಲಿಮರು ಒಂದು ರಾಷ್ಟ್ರ, ಮತ್ತು ಅವರು ತಮ್ಮ ನಾಡನ್ನು ಹೊಂದಲೇಬೇಕು,, ಹಾಗೆಯೇ ಅವರ ಪ್ರದೇಶ ಮತ್ತು ಅವರ ರಾಜ್ಯವನ್ನು ಹೊಂದಿರಬೇಕು" ಎಂದು ಘೋಷಿಸಿದರು. ಈ ಮುಸ್ಲಿಮರ ರಾಜ್ಯವನ್ನು ಪಾಕಿಸ್ತಾನವೆಂದು ಕರೆಯಲಾಗುತ್ತಿತ್ತು, ಇದರ ಅರ್ಥ "ಶುದ್ಧ ಭೂಮಿ" ಎಂದರು. ನೆಹರು ಕೋಪದಿಂದ ಇವು "ಎಲ್ಲಾ ಹಳೆಯ ಸಮಸ್ಯೆಗಳು ... ಲಾಹೋರಿನಲ್ಲಿ ಮುಸ್ಲಿಮ್ ಲೀಗ್ ಮುಖಂಡರು ತೆಗೆದುಕೊಂಡ ಇತ್ತೀಚಿನ ನಿಲುವಿನಲ್ಲಿ ಅವಿಭಾಜ್ಯತೆಗೆ ಒಳಗಾಗಿದ್ದಾರೆ" ಎಂದು ಘೋಷಿಸಿದರು. ಲಿನ್ಲಿತ್ಗೋ ನೆಹರೂಗೆ 8 ಅಕ್ಟೋಬರ್ 1940 ರಂದು ಒಂದು ಪ್ರಸ್ತಾವನೆಯನ್ನು ನೀಡಿದರು. ಬ್ರಿಟಿಷ್ ಸರ್ಕಾರದ ಉದ್ದೇಶವು ಭಾರತಕ್ಕೆ "ಡೊಮಿನಿಯನ್ ಸ್ಥಾನಮಾನ"$ ನೀಡುವುವೆಂದು ಅದು ಹೇಳಿದೆ. ಆದರೆ, ಇದು ಒಂದು ದಿನಾಂಕ ಅಥವಾ ಸಾಧನೆಯ ವಿಧಾನವನ್ನು ಉಲ್ಲೇಖಿಸಿಲ್ಲ. ಆದರೆ ಜಿನ್ನಾಗೆ ಮಾತ್ರ ಹೆಚ್ಚು ನಿಖರವಾದದ್ದು ಸಿಕ್ಕಿತ್ತು (ವಿಭಜನೆಯ ಭರವಸೆ). ವೈಸ್‍ರಾಯ್ ಲಿನ್ಲಿತ್ಗೋ ಹೇಳಿದರು "ಬ್ರಿಟಿಷರು ಕಾಂಗ್ರೆಸ್-ಪ್ರಾಬಲ್ಯದ ರಾಷ್ಟ್ರೀಯ ಸರ್ಕಾರಕ್ಕೆ ಅಧಿಕಾರವನ್ನು ವರ್ಗಾವಣೆ ಮಾಡುವುದನ್ನು ಪರಿಗಣಿಸುವುದಿಲ್ಲ, ಅದರ ಅಧಿಕಾರವನ್ನು" ಭಾರತದ ರಾಷ್ಟ್ರೀಯ ಜೀವನದಲ್ಲಿ ದೊಡ್ಡ ಮತ್ತು ಶಕ್ತಿಯುತ ಅಂಶಗಳಿಂದ ನಿರಾಕರಿಸಲಾಗಿದೆ ". (ಕಾಂಗ್ರೆಸ್-ಪ್ರಾಬಲ್ಯದ ರಾಷ್ಟ್ರೀಯ ಸರ್ಕಾರಕ್ಕೆ ಅಧಿಕಾರವನ್ನು ವರ್ಗಾವಣೆ ಮಾಡುವುದಿಲ್ಲ- ಕಾರಣ ಒಂದು ಶಕ್ತಿಯುತ ಅಂಶ ಅಡ್ಡ ಬಂದಿದೆ- ಅದು ಜಿನ್ನಾ ಮತ್ತು ಲೀಗ್- ಲೀಗ್ ಬ್ರಿಟಿಷರಿಂದ ಭರವಸೆ ಪಡೆದಿದೆ ಎಂದು ಅರ್ಥ)[80] [81] ಅಕ್ಟೋಬರ್ 1940 ರಲ್ಲಿ, ಗಾಂಧಿಯವರು ಮತ್ತು ನೆಹರೂ ಅವರು ಎರಡನೇ ಮಹಾ ಯುದ್ಧಕ್ಕೆ ಬ್ರಿಟನ್ನನ್ನು ಬೆಂಬಲಿಸುವ ತಮ್ಮ ನಿಲುವನ್ನು ಬಿಟ್ಟುಬಿಟ್ಟರು, ಒಂದು ಸೀಮಿತ ನಾಗರಿಕ ಅಸಹಕಾರ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಿದರು, ಇದರಲ್ಲಿ ಭಾರತದ ಸ್ವಾತಂತ್ರ್ಯದ ಪ್ರಮುಖ ವಕೀಲರು ಒಬ್ಬೊಬ್ಬರಾಗಿ ಭಾಗವಹಿಸಲು ಆಯ್ಕೆಯಾದರು. ನೆಹರುರನ್ನು ಬಂಧಿಸಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಜೈಲಿನಲ್ಲಿ ಒಂದು ವರ್ಷಕ್ಕಿಂತ ಸ್ವಲ್ಪ ಹೆಚ್ಚು ದಿನ ಕಳೆದ ನಂತರ, ಹವಾಯಿಯಲ್ಲಿನ ಪರ್ಲ್ ಹಾರ್ಬರ್ ಬಾಂಬ್ ದಾಳಿಯ ಮೂರು ದಿನಗಳ ಮುಂಚೆ, ಇತರ ಕಾಂಗ್ರೆಸ್ ಕೈದಿಗಳ ಜೊತೆಗೆ ಅವರನ್ನು ಬಿಡುಗಡೆ ಮಾಡಲಾಯಿತು. ($"ಡೊಮಿನಿಯನ್ ಸ್ಥಾನಮಾನ" - ಎಂದರೆ ಕೇಂದ್ರ ಸರ್ಕಾರಕ್ಕೆ ರಾಜ್ಯಗಳನ್ನು ಶತ್ರುಗಳಿಂದ ರಕ್ಷಣೆ ಮಾಡುವ ಅಧಿಕಾರ ಮತ್ತು ಗೌರ್ನರುಗಳನ್ನು/ ರಾಜ್ಯದ ಅಧ್ಯಕ್ಷರನ್ನು ನೇಮಿಸುವ ಆಧಿಕಾರ ಮಾತ್ರಾ ಇರುತ್ತದೆ ಉಳಿದ ಎಲ್ಲಾ ವಿಷಯದಲ್ಲಿ ರಾಜ್ಯಗಳು ಸ್ವತಂತ್ರವಾಗಿರುತ್ತವೆ; ರಾಜ್ಯಗಳ ಒಳಾಡತದಲ್ಲಿ ಕೇಂದ್ರಸ್ಕಾರ ಪ್ರವೇಶಿಸುವಂತಿಲ್ಲ. ಈಗ ಇಂಗ್ಲೆಡ್ ಮತ್ತು ಆಸ್ಟ್ರೇಲಿಯಾ ಇದ್ದಂತೆ. ಬ್ರಿಟಿಷ್ ಸರ್ಕಾರ ರಾಷ್ಟ್ರಾಧ್ಯಕ್ಷರನ್ನು ನೇಮಿಸುತ್ತದೆ. ಹಾಗೆ ಭಾರತದ ೫೬೦ ಸಂಸ್ಥಾನ-ರಾಜ್ಯಗಳು ಸ್ವತಂತ್ರವಾಗಿರುವ ಡೊಮಿನಿಯನ್ ಸರ್ಕಾರನೀಡುವ ಯೋಜನೆ ಬ್ರಿಟಿಷರದಾಗಿತ್ತು. ಇದಕ್ಕೆ ಅನೇಕ ಸದಸ್ಯರು ಬೆಂಬಲಿಸಿದರೂ, ಇದನ್ನು ನೆಹರು ವಿರೋಧಿಸಿ ಎಲ್ಲಾ ರಾಜ್ಯಗಳೂ ವಿಲೀನವಾದ ಬಲಿಷ್ಠ ಕೇಂದ್ರವುಳ್ಳ ಸ್ವತಂತ್ರಭಾರತ ರಚನೆಗೆ ಒತ್ತಾಯಿಸಿದರು.) ಭಾರತದ ಮೇಲೆ ಜಪಾನಿನ ಆಕ್ರಮಣ 1942 ರ ವಸಂತ ಋತುವಿನಲ್ಲಿ ಜಪಾನ್ ಬರ್ಮಾದ ಮೂಲಕ (ಈಗ ಮಯನ್ಮಾರ್) ಭಾರತದ ಮೇಲೆ ಆಕ್ರಮಣವನ್ನು ನಡೆಸಿದಾಗ, ಬ್ರಿಟಿಷ್ ಸರ್ಕಾರವು ಈ ಹೊಸ ಮಿಲಿಟರಿ ಬೆದರಿಕೆ ಎದುರಿಸಬೇಕಾಯಿತು, ಅದು ನೆಹರೂ ಮೊದಲಿಗೆ ಬಯಸಿದಂತೆ, ಭಾರತಕ್ಕೆ ಕೆಲವು ಪ್ರಸ್ತಾಪಗಳನ್ನು ಮಾಡಲು ನಿರ್ಧರಿಸಿದರು. ಪ್ರಧಾನ ಮಂತ್ರಿ ವಿನ್ಸ್ಟನ್ ಚರ್ಚಿಲ್ ಯುದ್ಧಸಮಯದ ಕ್ಯಾಬಿನೆಟ್’ನ ಸದಸ್ಯರಾದ ಸರ್ ಸ್ಟಾಫರ್ಡ್ ಕ್ರಿಪ್ಸ್ ರನ್ನು ಭಾರತಕ್ಕೆ ಕಳಿಸಿದರು. ಅವರು ನೆಹರುರನ್ನು ರಾಜಕೀಯವಾಗಿ ನಿಕಟವಾಗಿ ತಿಳಿದಿದ್ದನು ಮತ್ತು ಸಾಂವಿಧಾನಿಕ ಸಮಸ್ಯೆಯ ಪರಿಹಾರಕ್ಕಾಗಿ ಪ್ರಸ್ತಾಪಿಸಲು ಜಿನ್ನಾರನ್ನೂ ತಿಳಿದಿದ್ದನು. ಅವರು ಆಗಮಿಸಿದ ತಕ್ಷಣವೇ ಅವರು ಕಲ್ಪಿಸಿಕೊಂಡಿದ್ದಕ್ಕಿಂತಲೂ ಭಾರತ ಹೆಚ್ಚು ಆಳವಾಗಿ ವಿಭಜನೆಯಾಗಿದೆ ಎಂದು ಕಂಡುಹಿಡಿದನು. ನೆಹರೂ, ರಾಜಿಗಾಗಿ ಉತ್ಸುಕನಾಗಿದ್ದರು ಮತ್ತು ರಾಜಿಯಾಗಬಹುದೆಂದು ಭರವಸೆ ಹೊಂದಿದ್ದರು.,. ಗಾಂಧಿಯವರಿಗೆ ರಾಜಿಯ ಭರವಸೆಯಿರಲಿಲ್ಲ. ಜಿನ್ನಾ ಕಾಂಗ್ರೆಸ್ ವಿರುದ್ಧ ವಿರೋಧವನ್ನು ಮುಂದುವರಿಸಿದರು. "ಪಾಕಿಸ್ತಾನ ನಮ್ಮ ಏಕೈಕ ಬೇಡಿಕೆಯಾಗಿದೆ, ಮತ್ತು ಖಂಡಿತ ದೈವಸಾಕ್ಷಿಯಾಗಿ ಅದನ್ನು ನಾವು ಪಡೆಯುತ್ತೇವೆ" ಎಂದು ಜಿನ್ನಾ ಹೇಳಿದುದನ್ನು ಮುಸ್ಲಿಂ ಲೀಗ್ ಪತ್ರಿಕೆ "ಡಾನ್" ಘೋಷಿಸಿತು. (Jinnah had continued opposing the Congress. "Pakistan is our only demand, and by God we will have it.", declared the Muslim League newspaper "Dawn".[86]) ಪೂರ್ಣ ಸ್ವಾತಂತ್ರ್ಯಕ್ಕಿಂತಲೂ ಕಡಿಮೆಯದನ್ನು ಏನನ್ನೂ ಗಾಂಧಿಯವರು ಸ್ವೀಕರಿಸುವುದಿಲ್ಲ ಎಂದಾಗ ಕ್ರಿಪ್ಸ್ನ ಮಿಷನ್ ವಿಫಲವಾಯಿತು. ಕ್ರಿಪ್ಸ್‍ರೊಂದಿಗೆ ಸಹಕರಿಸಲು ಗಾಧೀಜಿಯವರ ನಿರಾಕರಣೆಯಿಂದ ನೆಹರೂ ಮತ್ತು ಗಾಂಧಿಯವರ ನಡುವಿನ ಹಳಸಿದ ಸಂಬಂಧವು ತಂಪುಗೊಂಡಿತು, ಆದರೆ ಇಬ್ಬರೂ ನಂತರ ರಾಜಿ ಮಾಡಿಕೊಂಡರು. 15 ಜನವರಿ 1941 ರಂದು, ಗಾಂಧಿಯವರು ಹೀಗೆ ಹೇಳಿದರು: ‘ಕೆಲವರು ಜವಾಹರಲಾಲ್ ಮತ್ತು ನಾನು ಪ್ರತ್ಯೇಕಗೊಂಡಿದ್ದೇವೆ ಎಂದು ಹೇಳುತ್ತಾರೆ. ನಮ್ಮನ್ನು ಬೇರ್ಪಡಿಸಲು ಅಭಿಪ್ರಾಯದ ಬೇಧಕ್ಕಿಂತ ಹೆಚ್ಚು ದೊಡ್ಡದು ಅಗತ್ಯವಿರುತ್ತದೆ. ನಾವು ಸಹೋದ್ಯೋಗಿಗಳಾಗಿದ್ದ ಸಮಯದಿಂದ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದೇವೆ ಮತ್ತು ಇನ್ನೂ ಕೆಲವು ವರ್ಷಗಳಿಂದ ನಾನು ಹೇಳುತ್ತಿದ್ದೇನೆ ಮತ್ತು ಈಗ ಮತ್ತೆ ಹೇಳುವುದೇನೆಂದರೆ ರಾಜಾಜಿಯಲ್ಲ ಆದರೆ ಜವಾಹರಲಾಲ್ ನನ್ನ ಉತ್ತರಾಧಿಕಾರಿಯಾಗುತ್ತಾರೆ. [87] ಭಾರತವನ್ನು ಬಿಟ್ಟು ಹೋಗಲು (ಕ್ವಿಟ್ ಇಂಡಿಯಾ) ಬ್ರಿಟಿಷರಿಗೆ ಗಾಂಧಿಯವರು ಕರೆ ನೀಡಿದರು; ನೆಹರು, ಮಿತ್ರಪಕ್ಷದ (ಬ್ರಿಟಿಷರಿಗೆ) ಯುದ್ಧದ ಹೋರಾಟಕ್ಕೆ ಮುಜುಗರಕ್ಕೊಳಪಡಿಸಲು ಇಷ್ಟವಾಗದಿದ್ದರೂ, ಗಾಂಧಿಯವರ ಜೊತೆ ಸೇರದೆ ಬೇರೆ ಯಾವುದೇ ಪರ್ಯಾಯವಿಲ್ಲವಾಯಿತು. ಆಗಸ್ಟ್ 8, 1942 ರಂದು ಬಾಂಬೆ (ಈಗ ಮುಂಬೈ) ಕಾಂಗ್ರೆಸ್ ಪಕ್ಷವು “ಕ್ವಿಟ್ ಇಂಡಿಯಾ- ಭಾರತ ಬಿಟ್ಟು ತೊಲಗಿ” ನಿರ್ಣಯವನ್ನು ಅಂಗೀಕರಿಸಿತು. ಅದನ್ನು ಅನುಸರಿಸಿ, ಗಾಂಧಿ ಮತ್ತು ನೆಹರೂ ಸೇರಿದಂತೆ ಇಡೀ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಬಂಧಿಸಲಾಯಿತು. ಇದು ನೆಹರೂ ಅವರ ಒಂಭತ್ತನೇ ಮತ್ತು ಕೊನೆಯ ಬಂಧನ. ನೆಹರು ಅದರಿಂದ - 15 ಜೂನ್ 1945 ರಂದು ಹೊರಬಂದರು. ಎಲ್ಲಾ ಕಾಂಗ್ರೆಸ್ ನಾಯಕತ್ವ ಜೈಲಿನಲ್ಲಿದ್ದ ಈ ಅವಧಿಯಲ್ಲಿ, ಜಿನ್ನಾರ ಮುಸ್ಲಿಂ ಲೀಗ್ ಬಲಪಡೆದು ಬೆಳೆಯಿತು. ಏಪ್ರಿಲ್ 1943 ರಲ್ಲಿ, ಮುಸ್ಲಿಂ ಲೀಗ್ ಚುನಾವಣೆಯಲ್ಲಿ ಬಂಗಾಳ ಸರ್ಕಾರಗಳನ್ನು ವಶಪಡಿಸಿಕೊಂಡಿತು ಮತ್ತು ಒಂದು ತಿಂಗಳ ನಂತರ, ನಾರ್ತ್ ವೆಸ್ಟ್ ಫ್ರಾಂಟೀಯರ್ ಪ್ರಾಂತವನ್ನು ಅದು ಆಕ್ರಮಿಸಿತು. ಈ ಪ್ರಾಂತಗಳಲ್ಲಿ ಯಾವಾಗಲೂ ಹಿಂದೆ ಲೀಗ್ ಬಹುಮತವನ್ನು ಹೊಂದಿರಲಿಲ್ಲ - ಕಾಂಗ್ರೆಸ್ ಸದಸ್ಯರ ಬಂಧನದಿಂದ ಮಾತ್ರಾ ಇದು ಸಾಧ್ಯವಾಯಿತು. ಜಿನ್ನಾ ನಿಯಂತ್ರಣದಡಿಯಲ್ಲಿ ಪಂಜಾಬ್ ಹೊರತುಪಡಿಸಿ ಎಲ್ಲ ಮುಸ್ಲಿಮ್ ಪ್ರಾಬಲ್ಯದ ಪ್ರಾಂತ್ಯಗಳೊಂದಿಗೆ, ಪ್ರತ್ಯೇಕ ಮುಸ್ಲಿಂ ರಾಜ್ಯದ ಕೃತಕ ಪರಿಕಲ್ಪನೆಯು ಒಂದು ವಾಸ್ತವವಾಗಿ (ರಿಯಾಲಿಟಿ) ಆಗಿ ಮಾರ್ಪಟ್ಟಿತು. ಆದಾಗ್ಯೂ, 1944 ರ ಹೊತ್ತಿಗೆ, ಜಿನ್ನಾ ಅವರ ಶಕ್ತಿ ಮತ್ತು ಘನತೆಯು ಕ್ಷೀಣಿಸುತ್ತಿತ್ತು. ಕಾರಾಗೃಹದಲ್ಲಿದ್ದ ಕಾಂಗ್ರೆಸ್ ಮುಖಂಡರಿಗೆ ಸಾಮಾನ್ಯ ಸಹಾನುಭೂತಿಯು ಮುಸ್ಲಿಮರಲ್ಲಿ ಬೆಳೆಯುತ್ತಿತ್ತು ಮತ್ತು ಪ್ರಾಂತ್ಯದ ಮುಸ್ಲಿಮ್ ಲೀಗ್ ಸರಕಾರದ ಹೆಗಲ ಮೇಲೆ ಎರಡು ಮಿಲಿಯನ್ ಜನರ ಸಾವಿನ 1943-44ರ ದುರ್ಘಟನೆಯಲ್ಲಿ 20 ಲಕ್ಷ ಜನ ಸಾವನ್ನಪ್ಪಿದರು. ಹಿಂದೂ ಮುಸ್ಲಿಮ್ ದಂಗೆಯಲ್ಲಿ ಸತ್ತವರ ಜೊತೆ - ಅದರಲ್ಲಿ ಬಂಗಾಳ ಕ್ಷಾಮದ ಮೇಲೆ ಹೆಚ್ಚಿನ ಆಪಾದನೆ ಇತ್ತು. ಒಮ್ಮೆ ಜಿನ್ನಾರವರ ಸಭೆಗಳಲ್ಲಿ, ಸಾವಿರಾರು ಸಂಖ್ಯೆಯಲ್ಲಿ ಎಣಿಸಿದ ಜನರಿದ್ದರೆ ನಂತರ ಸಂಖ್ಯೆಗಳು ಕ್ಷೀಣಿಸಿ ಶೀಘ್ರದಲ್ಲೇ ಕೆಲವು ನೂರಾರು ಸಂಖ್ಯೆಯನ್ನು ಹೊಂದಿತ್ತು. ಹತಾಶೆಯಲ್ಲಿ, ಜಿನ್ನಾ ರಾಜಕೀಯ ವ್ಯವಹಾರವನ್ನು ಬಿಟ್ಟು ಕಾಶ್ಮೀರದ ವಾಸ್ತವ್ಯಕ್ಕಾಗಿ ಹೋದರು. ಮೇ 1944 ರಲ್ಲಿ ವೈದ್ಯಕೀಯ ಕಾರಣಕ್ಕೆ ಸೆರೆಮನೆಯಿಂದ ಬಿಡುಗಡೆಗೊಂಡು ಸೆಪ್ಟೆಂಬರ್ನಲ್ಲಿ ಬಾಂಬೆಯಲ್ಲಿ ಜಿನ್ನಾವನ್ನು ಭೇಟಿಯಾದಾಗ ಗಾಂಧಿಯವರು ತಮಗೆ ಅರಿವಿಲ್ಲದಂತೆ ಅವರ ಪ್ರತಿಷ್ಠೆಯನ್ನು ಹೆಚ್ಚಿಸಿಸಿದರು. ಅಲ್ಲಿ ಅವರು ಭಾರತದ ಉಳಿದ ಭಾಗದಿಂದ ಬೇರ್ಪಡಿಸಲು ಬಯಸುತ್ತಾರೆಯೇ ಎಂದು ತಿಳಿಯಲು ಯುದ್ಧದ ನಂತರ ಮುಸ್ಲಿಂ ಪ್ರದೇಶಗಳಲ್ಲಿ ಮುಸ್ಲಿಂ ಮುಖಂಡರಿಗೆ ಜನಮತ ಸಂಗ್ರಹದ ಅವಕಾಶವನ್ನು ನೀಡಿದರು. ಮೂಲಭೂತವಾಗಿ, ಅದು ಪಾಕಿಸ್ತಾನದ ತತ್ವವನ್ನು ಸ್ವೀಕರಿಸಿದ ಹಾಗೆ ಆಗಿತ್ತು - ಆದರೆ ಅದು ಸ್ಪಷ್ಟವಾದ ಪದಗಳಲ್ಲಿ ಪಾಕಿಸ್ತಾನದ ಉದಯಕ್ಕೆ ಒಪ್ಪಿ ಹೇಳಿದ್ದು ಅಲ್ಲ. ಆದ್ದರಿಂದ ನಿಖರವಾದ ಪದಗಳಲ್ಲಿ ಹೇಳಬೇಕೆಂದು ಜಿನ್ನಾ ಒತ್ತಾಯಿಸಿದರು; ಗಾಂಧಿ ಅದಕ್ಕೆ ನಿರಾಕರಿಸಿದರು ಮತ್ತು ಅದರ ಫಲವಾಗಿ ಮಾತುಕತೆ ಮುರಿಯಿತು. ಆದಾಗ್ಯೂ, ಜಿನ್ನಾ ತನ್ನ ಸ್ಥಾನ ಮತ್ತು ಲೀಗ್’ನ ಬಲವನ್ನು ಹೆಚ್ಚು ಬಲಪಡಿಸಿಕೊಂಡಂತೆ ಆಯಿತು.. ಕಾಂಗ್ರೆಸ್ಸಿನ ಅತ್ಯಂತ ಪ್ರಭಾವಶಾಲಿ ಕಾಂಗ್ರಸ್ ಸದಸ್ಯರು ಜಿನ್ನಾನೊಂದಿಗೆ ಸಮಾನ ಸ್ತರದಲ್ಲಿ ಮಾತುಕತೆ ನಡೆಸಿ ಕಾಣಿಸಿಕೊಂಡಿದ್ದರು. ಆದರ ಕಾರಣ ಜಿನ್ನಾಗೆ ಇತರ ವಿರೋದಿಗಳಾದü ಮುಸ್ಲಿಂ ಲೀಗ್ ಮುಖಂಡರು, ಮತ್ತು ಭಾರತದ ವಿಭಜನೆಗೆ ವಿರೋಧಿಸಿದವರು, ಶಕ್ತಿ ಕಳೆದುಕೊಂಡರು, ಅಥವಾ ಜಿನ್ನಾಗೆ ಸೋತರು. ಭಾರತದ ಪ್ರಧಾನಿಯಾಗಿ (1947-64) ಆಗಸ್ಟ್ 15, 1947 ನೆಹರು ಮತ್ತು ಅವರ ಸಹೋದ್ಯೋಗಿಗಳನ್ನು 1946 ರ ಕ್ಯಾಬಿನೆಟ್ ಮಿಷನ್’ಗೆ (ಬ್ರಿಟಿಷ್ ಮಂತ್ರಿಮಂಡಲದ ಕಾರ್ಯನಿರ್ವಣೆಯ ದೂತ) ಭಾರತಕ್ಕೆ ಅಧಿಕಾರಕ್ಕೆ ವರ್ಗಾಯಿಸುವ ಯೋಜನೆಗಳನ್ನು ಪ್ರಸ್ತಾವಿಸಲು ಬಿಡುಗಡೆ ಮಾಡಲಾಯಿತು. ಜವಾಹರಲಾಲ್ ನೆಹರೂ ಅವರು ಆಗಸ್ಟ್ 14 - 15, 1947 ರಂದು ನಡೆದ ಸಮಾರಂಭದಲ್ಲಿ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿಯಾಗಿ ಲಾರ್ಡ್ ಮೌಂಟ್ಬ್ಯಾಟನ್’ ರಿಂದ ಆದೇಶ ಪಡೆದು ಶಪಥ ಮಾಡಿದರು. ನಾಯಕರಾಗಿ ಚುನಾಯಿತರಾದ, ನೆಹರು ಅವರು ಮಧ್ಯಂತರ ಸರ್ಕಾರದ ನೇತೃತ್ವ ವಹಿಸಿದರು (ನಡುಗಾಲ ಸರ್ಕಾರ - ಸ್ವಾತಂತ್ರ ಪೂರ್ವದ ವೈಸ್’ರಾಯ ನೇಮಿತ ಬ್ರಿಟಿಷ್ ಅಧೀನ ತಾತ್ಕಾಲಿಕ ಸರ್ಕಾರ.), ಇದು ಕೋಮು ಹಿಂಸಾಚಾರ (ಪಾಕಿಸ್ತಾನ ಬೇಡಿಕೆಯ ಈಡೇರಿಕೆಗಾಗಿ ಜಿನ್ನಾರ "ಡೈರೆಕ್ಟ್ ಆಕ್ಷನ್" ಎಂಬ ಹಿಂಸೆ ಮತ್ತು ಹತ್ಯೆ - ಲೂಟಿಗೆ ಕರೆಯಿಂದ ಕೋಮುಗಲಭೆ) ಮತ್ತು ರಾಜಕೀಯ ಅವ್ಯವಸ್ಥತೆಯಿಂದಾಗಿ ದುರ್ಬಲಗೊಂಡಿತು ಮತ್ತು ಮುಸ್ಲಿಂ ಲೀಗಿನ ಮುಖಂಡರಾದ ಮುಹಮ್ಮದ್ ಅಲಿ ಜಿನ್ನಾರವರು ಪಾಕಿಸ್ತಾನದ ಪ್ರತ್ಯೇಕ ಮುಸ್ಲಿಂ ರಾಷ್ಟ್ರಕ್ಕಾಗಿ ಒತ್ತಾಯಿಸುತ್ತಿದ್ದರು. ಲೀಗ್ ಮತ್ತು ಕಾಂಗ್ರೆಸ್ ಗಳ ಒಕ್ಕೂಟಗಳನ್ನು ರೂಪಿಸಲು ವಿಫಲವಾದ ನಂತರ, ನೆಹರೂ ಇಷ್ಟವಿಲ್ಲದೆ ಭಾರತ ವಿಭಜನೆಯನ್ನು ಬೆಂಬಲಿಸಿದರು, ದಿ.3 ಜೂನ್ 1947 ರಂದು ಬ್ರಿಟೀಷರಿಂದ ಬಿಡುಗಡೆಯಾದ ಒಂದು ಯೋಜನೆ ಪ್ರಕಾರ, ಅವರು ಆಗಸ್ಟ್ 15 ರಂದು ಸ್ವತಂತ್ರ ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು, ಮತ್ತು ಅವರ "ಟ್ರೈಸ್ಟ್ ವಿತ್ ಡೆಸ್ಟಿನಿ ಎಂಬ ಸ್ವತಂತ್ರಭಾರತದ ಉದ್ಘಾಟನೆಯ ಪ್ರಸಿದ್ಧ ಭಾಷಣವನ್ನು ಮಾಡಿದರು.[ಅದೇ] “ಬಹಳ ವರ್ಷಗಳ ಹಿಂದೆ ನಾವು ಉತ್ತಮ ಭವಿಷ್ಯದ ಗುರಿಸಾಧನೆಗಾಗಿ ವಚನಬದ್ದತೆ ಹೊಂದಿದ್ದೇವೆ (tryst - ಪ್ರೊಮಿಸ್- ವಚನಬದ್ಧತೆ, with destiny -ಗುರಿ, destination), ಮತ್ತು ಈಗ ನಾವು ನಮ್ಮ ಪ್ರತಿಜ್ಞೆಯ ಗುರಿಯನ್ನು ಪೂರ್ಣವಾಗಿ ಅಥವಾ ಪೂರ್ಣ ಶಕ್ತಿಯಿಂದ ಪಡೆದುಕೊಳ್ಳುವ, ಪೂರ್ಣವಾಗಿ ಅಲ್ಲದಿದ್ದರೂ ಬಹಳ ಮಟ್ಟಿಗೆ ಆದರೆ ಗಣನೀಯವಾಗಿ ಸಾಧಿಸುವ ಸಮಯ ಬಂದಿದೆ. ಈ ದಿನ ಮಧ್ಯರಾತ್ರಿಯ ಗಂಟೆಯ ಹೊಡೆದಾಗ, ಪ್ರಪಂಚವು ನಿದ್ರಿಸುತ್ತಿರುದಾಗ, ಭಾರತ ತನ್ನ ಜೀವನಕ್ಕಾಗಿ ಮತ್ತು ಸ್ವಾತಂತ್ರ್ಯಕ್ಕಾಗಿ ಎಚ್ಚರಗೊಳ್ಳುತ್ತಿದೆ. ಒಂದು ಶುಭ ಕ್ಷಣವು ಬರುತ್ತದೆ, ಆದರೆ ಇತಿಹಾಸದಲ್ಲಿ ಇದು ಅಪರೂಪವಾಗಿ ಬರುತ್ತದೆ, ನಾವು ಹಳೆಯದರಿಂದ ಹೊಸದಕ್ಕೆ ಬಂದಾಗ, ಒಂದು ಶಕೆಯ ಕೊನೆಗೊಂಡಾಗ ಮತ್ತು ರಾಷ್ಟ್ರದ ಆತ್ಮವು ದೀರ್ಘಕಾಲ ದಮನವಾದ ನಂತರ ಈಗ ಅದು ತನ್ನ ದನಿಯನ್ನು ಕಂಡುಕೊಳ್ಳುತ್ತದೆ. ಈ ಗಂಭೀರ ಕ್ಷಣದಲ್ಲಿ ನಾವು ಭಾರತ ಮತ್ತು ಅದರ ಜನರ ಸೇವೆಗೆ ಸಮರ್ಪಣೆ ಮಾಡುವ ಮತ್ತು ಮಾನವೀಯತೆಗೆ ಇನ್ನೂ ದೊಡ್ಡ ಕೊಡಿಗೆಯನ್ನೂ ನೀಡುವ ಪ್ರತಿಜ್ಞೆಯನ್ನೂ ತೆಗೆದುಕೊಳ್ಳುವುದು ಸೂಕ್ತವಾಗಿದೆ.” - (Tryst with Destiny. ನಿಸ್ತಂತು ಧ್ವನಿಮುದ್ರಿಕೆಯ ಆಡಿಯೋ:(Americn rethoric online speech Bank) Jawaharlal Nehru-'Tryst with Destiny'14-15 August 1947; ನ್ಯೂಯಾರ್ಕ್ ಟೈಮ್ಸ್:ಚಿಂತಾಮಗ್ನ ನೆಹರು-ಗಾಂಧಿ:: ಗಾಂಧೀಜಿಯವರ ಹತ್ಯೆ ಗಾಂಧೀಜಿಯವರು 1948 ರ ಜನವರಿ 30 ರಂದು, ಪ್ರಾರ್ಥನಾ ಸಭೆಗೆ ಅವರು ಪ್ರವಚನ ನೀಡಲು ವೇದಿಕೆಗೆ ಹೋಗುತ್ತಿದ್ದಾಗ ಅವರನ್ನು ನಾಥೂರಾಮ್ ಗೋಡ್ಸೆ ಗುಂಡಿಟ್ಟು ಹತ್ಯೆಗೈದನು. (ಕಾರಣ :-ಅಖಂಡ ಭಾರತವನ್ನು ಗಾಂಧಿ ಹಾಗೂ ನಹರು ಸೇರಿದ ಪ್ರಮುಖರಿಂದ ವಿಭಜನೆ ಮಾಡಿ, ಪಾಕಿಸ್ತಾನ ಮಾಡಿದ್ದಕ್ಕಾಗಿ.. ಅಲ್ಲದೇ ಗಾಂಧಿಯವರು ಬಂಗಾಳವನ್ನು, ಹೈದರಾಬಾದ್ ಪ್ರಾಂತವನ್ನು ಸಹ ಪಾಕಿಸ್ತಾನಕ್ಕೆ ವಹಿಸಲು ಮುಂದಾಗುತ್ತಿದ್ದರು.) ಭಾರತ ವಿಭಜನೆಯ ಸಮಯದಲ್ಲಿ ಆದ ಒಪ್ಪಂದದಂತೆ ಪಾಕಿಸ್ತಾನಕ್ಕೆ ಕೊಡಬೇಕಾದ ಹಣವನ್ನು ಭಾರತವು ಪಾವತಿಸುವಂತೆ ಗಾಂಧಿಯವರು ಒತ್ತಾಯಿಸಿ, ಭಾರತವನ್ನು ದುರ್ಬಲಗೊಳಿಸಲು ಜವಾಬ್ದಾರಿಯೆಂದು ಭಾವಿಸಿದ್ದನು. ಗಾಂಧೀಜಿಯ ಹತ್ಯೆಯ ನಂತರ ನೆಹರು ರೇಡಿಯೊದ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು: ಸ್ನೇಹಿತರೇ ಮತ್ತು ಒಡನಾಡಿಗಳೇ, ಬೆಳಕು- ನಮ್ಮ ಜೀವಗಳ ಬೆಳಕು ಹೊರಟುಹೋಗಿದೆ, ಮತ್ತು ಎಲ್ಲೆಡೆಯೂ ಕತ್ತಲೆ ತುಂಬಿದೆ, ಮತ್ತು ನಿಮಗೆ ಏನು ಹೇಳಬೇಕೆಂದು ಅಥವಾ ಅದನ್ನು ಹೇಗೆ ಹೇಳಬೇಕೆಂದು ನನಗೆ ಸರಿಯಾಗಿ ಗೊತ್ತಾಗುತ್ತಿಲ್ಲ. ನಮ್ಮ ಪ್ರೀತಿಯ ಮುಖಂಡ, ಬಾಪು ಎಂದು ನಾವು ಕರೆಯುವ, ನಾವು ರಾಷ್ಟ್ರ ಪಿತ ಎಂದು ಕರೆಯುತ್ತಿದ್ದ ಅವರು, ಈಗ ಬದಿಕಿಲ್ಲ. ಬಹುಶಃ ನಾನು ಆ ರೀತಿ ಹೇಳುವುದು ತಪ್ಪಿರಬಹುದು ; ಆದಾಗ್ಯೂ, ನಾವು ಅವರನ್ನು ನಾವು ಈ ಹಲವು ವರ್ಷಗಳಿಂದ ನೋಡಿದಂತೆ ಮತ್ತೆ ಅವರನ್ನು ನೋಡಲಾಗುವುದಿಲ್ಲ, ನಾವು ಅವರ ಬಳಿಗೆ ಸಲಹೆಗಾಗಿ ಓಡುಲಾಗುವುದಿಲ್ಲ ಅಥವಾ ಅವರಿಂದ ಸ್ವಾಂತನವನ್ನು ಪಡೆಯಲಾರೆವು , ಅದು ನನಗೆ ಮಾತ್ರವಲ್ಲ, ಆದರೆ ಅದು ಈ ದೇಶದಲ್ಲಿ ಲಕ್ಷಾಂತರ ಮತ್ತು ಲಕ್ಷಗಟ್ಟಲೆ ಜನರಿಗೆ ಅನ್ವಯಿಸುವುದು. ಗಾಂಧಿಯವರ ಮರಣ ಮತ್ತು ಅಂತ್ಯಕ್ರಿಯೆಯು ನೆಹರು ಮತ್ತು ಪಟೇಲರ ಅಡಿಯಲ್ಲಿ ಹೊಸ ಭಾರತ ರಾಷ್ಟ್ರದ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡಿದೆ ಎಂದು ಯಾಸ್ಮಿನ್ ಖಾನ್ ವಾದಿಸಿದರು. ಎರಡು ವಾರಗಳ ಅವಧಿಯಲ್ಲಿ ಅಂತ್ಯಕ್ರಿಯೆ, ಶವಸಂಸ್ಕಾರದ ಆಚರಣೆಗಳು ಮತ್ತು ಹುತಾತ್ಮರ ಚಿತಾಭಸ್ಮವನ್ನು ವಿತರಿಸುವುದು-ಮಿಲಿಯನ್‍ಗಟ್ಟಲೆ ಜನರು ಭಾಗವಹಿಸಿದ ಮತ್ತು ನೂರಾರು ಮಿಲಿಯನ್ ಜನರು ವೀಕ್ಷಿಸಿದ ಈ ಐತಿಹಾಸಿಕ ಸನ್ನಿವೇಶವನ್ನು ಕಾಂಗ್ರೆಸ್ ಭಾರೀ ದುಃಖದ ಸಾರ್ವಜನಿಕ ಪ್ರದರ್ಶನಗಳನ್ನು ಬಿಗಿಯಾಗಿ -ಸಮರ್ಥವಾಗಿ ನಿಯಂತ್ರಿಸಿತು. ಈ ಸಮಯದಲ್ಲಿ ಸರ್ಕಾರವು ತನ್ನ ಅಧಿಕಾರವನ್ನು ಪ್ರತಿಪಾದಿಸುವುದು, ಕಾಂಗ್ರೆಸ್ ಪಕ್ಷದ ನಿಯಂತ್ರಣವನ್ನು ಕಾನೂನುಬದ್ಧಗೊಳಿಸುವುದು ಮತ್ತು ಎಲ್ಲಾ ಧಾರ್ಮಿಕ ಅನಧಿಕೃತ ಪ್ಯಾರಾ-ಮಿಲಿಟರಿ ಗುಂಪುಗಳನ್ನು ನಿಗ್ರಹಿಸುವುದು ಅಗತ್ಯಗುರಿಯಾಗಿತ್ತು. ನೆಹರೂ ಮತ್ತು ಪಟೇಲ್ ಅವರು ಆರ್‍ಎಸ್ಎಸ್, ಮುಸ್ಲಿಂ ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಮತ್ತು ಖಾಕ್ಸಾರ್ ಗುಂಪುಗಳ ಸುಮಾರು 200,000 ಜನರನ್ನು ಬಂಧನಕ್ಕೊಳಪಡಿಸಿದರು. ಗಾಂಧೀಜಿಯವರ ಮರಣ ಮತ್ತು ಶವಸಂಸ್ಕಾರವು ದೂರ ದೂರದ ಜನರನ್ನು ಭಾರತೀಯ ಜನರೊಂದಿಗೆ ಸಂಪರ್ಕ ಕಲ್ಪಿಸಿತು. ಮತ್ತು ಭಾರತದ ಜನರಿಗೆ ಸ್ವಾತಂತ್ರ್ಯದ ಪರಿವರ್ತನೆಯ ಸಮಯದಲ್ಲಿ ಧಾರ್ಮಿಕ ಪಕ್ಷಗಳನ್ನು ನಿಗ್ರಹಿಸುವ ಅಗತ್ಯವನ್ನು ಇನ್ನಷ್ಟು ಅರ್ಥವಾಗುವಂತೆ ಮಾಡಿಕೊಟ್ಟಿತು. ತಂದೆಗೆ ಇಂದಿರಾ ಸೇವೆ ನಂತರದ ವರ್ಷಗಳಲ್ಲಿ, ಭಾರತದ ವಿಭಜನೆಗಾಗಿ ನೆಹರೂರನ್ನು ದೂಷಿಸಲು ಯತ್ನಿಸಿದ ಇತಿಹಾಸದ ಪರಿಷ್ಕೃತವಾದಿ ಶಾಖೆಯೊಂದು ಹೊರಹೊಮ್ಮಿತು, 1947 ರಲ್ಲಿ ಸ್ವತಂತ್ರ ಭಾರತಕ್ಕಾಗಿ ತಮ್ಮ ಹೆಚ್ಚಿನ ಕೇಂದ್ರ ಸರ್ಕಾರ ಅಧಿಕಾರವುಳ್ಳ ಭಾರತವನ್ನು ಸ್ಥಾಪಿಸುವ ಅವರ ನೀತಿಗಳನ್ನು ಉಲ್ಲೇಖಿಸಿ, ಟೀಕಿಸಿದರು. (ಕೆಲವರು ವಿರೋಧಿಸಿದರೂ ನೆಹರು ಸ್ವತಂತ್ರ ರಾಜ್ಯಗಳಿಗೆ ಅವಕಾಶವಿಲ್ಲದ, ಕೇಂದ್ರ ಪ್ರಧಾನ ಒಕ್ಕೂಟದ ಬಾರತಕ್ಕಾಗಿ ಮತ್ತು ಅದಕ್ಕೆ ಪೂರಕವಾದ ಸಂವಿಧಾನವಿರಬೇಕು ಎಂದು ಗಟ್ಟಿ ನಿಲುವು ತಾಳಿದರು. ಭಾರತವು ಇಂದು ಒಂದೇ ರಾಷ್ಟ್ರವಾಗಿ ಉಳಿಯಲು ಅವರ ನಿಲುವು ಕಾರಣವಾಗಿದೆ.) ಜಿನ್ನಾ ವಿಕೇಂದ್ರೀಕೃತ ಭಾರತಕ್ಕೆ ಪರವಾಗಿದ್ದು ಕೇಂದ್ರೀಕೃತ ಭಾರತ ನೀತಿಯನ್ನ ವಿರೋಧಿಸಿದರು. ಜಿನ್ನಾ ಪೂರ್ಣ ಸ್ವತಂತ್ರ ಪಾಕಿಸ್ತಾನದ ಬೇಡಿಕೆಯನ್ನೇ ಇಟ್ಟಿದ್ದರು. ಅವರನ್ನು ಒಲಿಸಲು ಫಡರಲ್ ವ್ಯವಸ್ಥೆಯ ಸಡಿಲವಾದ ಸುಮಾರು ೬೦೦ ಸ್ವತಂತ್ರ ಸಂಸ್ಥಾನಗಲ ಭಾರತ ಒಕ್ಕೂಟ ರಚಿಸಿದ್ದರೆ, ಇಂಗ್ಲೆಂಡಿನಿಂದ ಐರ್ಲೆಂಡ್ ಬೇರೆಯಾದಂತೆ ಎಲ್ಲಾ ಸಂಸ್ಥಾನಗಳೂ ಸ್ವತಂತ್ರವಾಗುತ್ತಿದ್ದವು. ಆ ನೀತಿಯಂತೆ ಎಲ್ಲ ಸಂಸ್ಥಾನಗಳೂ ಸ್ವತಂತ್ರವಾಗಿದ್ದು ನಂತರ ಬಿನ್ನಾಭಿಪ್ರಾಯ ಉದ್ಭವಿಸಿದಾಗ ಬೇರೆಯಾಗುತ್ತಿದ್ದವು ಮತ್ತು ಘರ್ಷಣೆಗೆ ಇಳಿಯುತ್ತಿದ್ದವು. ಭಾರತ ಅನೇಕ ರಾಜ್ಯಗಳಾಗಿ ಛಿದ್ರವಾಗುತ್ತಿತ್ತು. ಸ್ವಾತಂತ್ರ್ಯಾನಂತರದ ವರ್ಷಗಳಲ್ಲಿ, ನೆಹರೂ ಆಗಾಗ್ಗೆ ಅವರ ಮಗಳು ಇಂದಿರಾಗೆ ಅವಲಂಬಿಸುತ್ತಾ ತನ್ನನ್ನು ನೋಡಿಕೊಳ್ಳಲು ಮತ್ತು ಅವರ ವೈಯಕ್ತಿಕ ವ್ಯವಹಾರಗಳನ್ನು ನಿರ್ವಹಿಸಲು ಹೇಳುತ್ತಿದ್ದರು. ಅವರ ನೇತೃತ್ವದಲ್ಲಿ, ಕಾಂಗ್ರೆಸ್ 1952 ರ ಚುನಾವಣೆಯಲ್ಲಿ ಅಗಾಧವಾದ ಬಹುಮತವನ್ನು ಗಳಿಸಿತು. ಇಂದಿರಾ ನೆಹರು ಅವರ ಅಧಿಕೃತ ನಿವಾಸಕ್ಕೆ ತೆರಳಿದರು ಮತ್ತು ಅವರಿಗೆ ಸೇವೆಮಾಡಲು ನಿಂತರು. ಭಾರತ ಮತ್ತು ಪ್ರಪಂಚದಾದ್ಯಂತ ಅವರ ನಿರಂತರ ಸಹಚರರಾಗಿದ್ದರು. ಇಂದಿರಾ ವಾಸ್ತವವಾಗಿ ನೆಹರುರ ಮುಖ್ಯ (ಉಚಿತ) ಸಿಬ್ಬಂದಿಯಾಗಿದ್ದರು. [105][106] 1957 ರ ಚುನಾವಣೆಯಲ್ಲಿ ನೆಹರೂ ಕಾಂಗ್ರೆಸ್ ಗೆ ಪ್ರಮುಖ ಗೆಲುವು ನೀಡಿತು, ಆದರೆ ಅವರ ಸರ್ಕಾರವು ಏರುತ್ತಿರುವ ಸಮಸ್ಯೆಗಳು ಮತ್ತು ಟೀಕೆಗಳನ್ನು ಎದುರಿಸುತ್ತಿತ್ತು. ಆಂತರಿಕ ಪಕ್ಷದ ಭ್ರಷ್ಟಾಚಾರ ಮತ್ತು ಕಲಹದಿಂದ ನಿರಾಶೆಗೊಂಡ ನೆಹರೂ ಅವರು ರಾಜೀನಾಮೆ ನೀಡಲು ಯೋಚಿಸಿದರು ಆದರೂ ಸೇವೆಯನ್ನು ಮುಂದುವರಿಸಿದ್ದರು. 1959 ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅವರ ಪುತ್ರಿ ಇಂದಿರಾ ಅವರ ಚುನಾವಣೆಯಾದಾಗ ನೆಪೋಟಿವಾದದ (ನೆಪೋಟಿಸಮ್) ಬಗ್ಗೆ ಟೀಕೆಗೊಳಗಾಯಿತು, ಆದರೆ ನೆಹರು ಇಂದಿರಾ ಅವರ ಚುನಾವಣೆಯ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದ್ದರೂ ಸಹ, ಇದು "ರಾಜವಂಶವಾದ" ವನ್ನು ಹೋಲುವುದು ಕಂಡಿದೆ ಎಂಬ ಕಾರಣದಿಂದಾಗಿ; "ಇದು ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿ ಮತ್ತು ಅನಪೇಕ್ಷಿತ ವಿಷಯ" ಎಂದು ಅವರು ಹೇಳಿದರು, ಮತ್ತು ಅವರ ಕ್ಯಾಬಿನೆಟ್ನಲ್ಲಿ ಇಂದಿರಾ ಅವರಿಗೆ ಸ್ಥಾನವನ್ನು ನಿರಾಕರಿಸಿದರು. ಇಂದಿರಾ ಸ್ವತಃ ತನ್ನ ತಂದೆಯೊಂದಿಗೆ ನೀತಿಯವಿಷಯದಲ್ಲಿ ವಿರೋಧಿಸುತ್ತಿದ್ದಳು; ಮುಖ್ಯವಾಗಿ, ಅವರು ತಮ್ಮ ಸ್ವಂತ ಆಕ್ಷೇಪಣೆಗಳನ್ನು ಕೇರಳ ರಾಜ್ಯದ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸರಕಾರವನ್ನು ವಜಾಗೊಳಿಸಲು ಒತ್ತಡ ತಂದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಈ ಮೂಲಕ ತಮ್ಮ ವೈಯಕ್ತಿಕ ವಿರೋಧವನ್ನು ವ್ಯಕ್ತಪಡಿಸಿದರು. ನೆಹರು ಆಗಾಗ್ಗೆ ಇಂದಿರಾ ಅವರ ಹಠ ಮತ್ತು ಸಂಸತ್ತಿನ ಸಂಪ್ರದಾಯದ ಕಡೆಗಣಿಸುವಿಕೆಯಿಂದ ಮುಜುಗರಕ್ಕೊಳಗಾಗಲು ಆರಂಭಿಸಿದರು, ಮತ್ತು ತನ್ನ ತಂದೆಯಿಂದ ಬೇರೆಯಾದ ತನ್ನ ಸ್ವತಂತ್ರವಾದ ಸ್ವಭಾವವನ್ನು ತೋರಿಸಿದಾಗ ಬೇರೆ ದುರುದ್ದೇಶಗಳಿಲ್ಲದಿದ್ದರೂ ತಾನು ಹೇಳಿದ್ದನ್ನೇ ದೃಢೀಕರಿಸಿದಾಗ ನೆಹರು "ನೊಂದುಕೊಳ್ಳುತ್ತ್ತಿದ್ದರು" ಮತ್ತು "ಅಸಮಾಧಾನಗೊಳ್ಳುತ್ತಿದ್ದರು. 1962 ರ ಚುನಾವಣೆಗಳಲ್ಲಿ ನೆಹರೂ ಅವರು ಕಾಂಗ್ರೆಸ್ ಗೆಲುವಿನ ಬಹುಮತದೊಂದಿಗೆ ಜಯಗಳಿಸಿದರು. ಆದರೂ ಕಮ್ಯುನಿಸ್ಟ್ ಮತ್ತು ಸಮಾಜವಾದಿ ಪಕ್ಷಗಳು ಪ್ರಮುಖ ಫಲಾನುಭವಿಗಳಾಗಿದ್ದವು, ಜೊತೆಗೆ ಭಾರತೀಯ ಜನಸಂಘದಂತಹ ಕೆಲವು ಬಲಪಂಥೀಯ ಗುಂಪುಗಳು ಉತ್ತಮ ಫಲಪಡೆದವು. ಹತ್ಯೆ ಯತ್ನಗಳು ಮತ್ತು ಭದ್ರತೆ ಅಧಿಕೃತವಾಗಿ ತಿಳಿದಂತೆ ನೆಹರು ಅವರ ಮೇಲೆ ನಾಲ್ಕು ಹತ್ಯೆಯ ಪ್ರಯತ್ನಗಳು ನಡೆದಿವೆ. 1947 ರಲ್ಲಿ ಭಾರತ ವಿಭಜನೆಯ ಸಮಯದಲ್ಲಿ ಅವರು ನಾರ್ತ್-ವೆಸ್ಟ್ ಫ್ರಾಂಟಿಯರ್ ಪ್ರಾಂತ್ಯಕ್ಕೆ (ಈಗ ಪಾಕಿಸ್ತಾನದಲ್ಲಿದೆ) ಭೇಟಿ ನೀಡುತ್ತಿರುವಾಗ ಅವರು ಕಾರಿನಲ್ಲಿದ್ದಾಗ ಅವರ ಜೀವಹತ್ಯೆಯ ಮೊದಲ ಪ್ರಯತ್ನವು ನೆಡೆಯಿತು. ಎರಡನೆಯದು ಮಹಾರಾಷ್ಟ್ರದಲ್ಲಿ 1955 ರಲ್ಲಿ ರಿಕ್ಷಾ-ಎಳೆಯುವವನು ಚಾಕು-ಧಾರಿಯಾಗಿ ಆಕ್ರಮಣ ಮಾಡಿದಾಗ;. . ಮೂರನೆಯದು 1956 ರಲ್ಲಿ ಬಾಂಬೆಯಲ್ಲಿ (ಈಗ ಮಹಾರಾಷ್ಟ್ರ) ಸಂಭವಿಸಿತು. ನಾಲ್ಕನೆಯದು ಮಹಾರಾಷ್ಟ್ರದಲ್ಲಿ 1961 ರಲ್ಲಿ ರೈಲು ಹಳಿಗಳ ಮೇಲೆ ವಿಫಲ ಬಾಂಬು ಸ್ಪೋಟ ಪ್ರಯತ್ನವಾಗಿತ್ತು. ತಮ್ಮ ಜೀವಕ್ಕೆ ಬೆದರಿಕೆಗಳಿದ್ದರೂ, ನೆಹರು ತಮ್ಮ ಸುತ್ತ ಹೆಚ್ಚು ಭದ್ರತೆ ಹೊಂದಿರುವುದನ್ನು ತಿರಸ್ಕರಿಸಿದರು ಮತ್ತು ಅವರ ಚಲನ- ವಲನದ ಕಾರಣ ಜನರ ಸಂಚಾರವನ್ನು ಅಡ್ಡಿಪಡಿಸಲು ಇಷ್ಟಪಡಲಿಲ್ಲ. ನೆಹರು ಅವರ ಆರ್ಥಿಕ ನೀತಿಗಳು ವಿವರಕ್ಕೆ ನೋಡಿ:ಭಾರತ ದೇಶದ ಪಂಚ ವಾರ್ಷಿಕ ಯೋಜನೆಗಳು ಆಮದು ಬದಲಿ/ಅಮದನ್ನು ಸರಿತೂಗಿಸುವ ಕೈಗಾರೀಕರಣದ ಆಧಾರದ ಮೇಲೆ ನೆಹರು ಆರ್ಥಿಕ ನೀತಿಗಳನ್ನು ಜಾರಿಗೆ ತಂದರು ಮತ್ತು ಸರ್ಕಾರವು ನಿಯಂತ್ರಣವುಳ್ಳ ಸಾರ್ವಜನಿಕ ವಲಯದ ಮತ್ತು ಖಾಸಗಿ ನಿಯಂತ್ರಣ ವಲಯವುಳ್ಳ ಮಿಶ್ರ ಆರ್ಥಿಕ ವ್ಯವಸ್ಥೆಯನ್ನು ಜಾರಿಗೆ ತಂದರು. ಭಾರತೀಯ ಆರ್ಥಿಕತ ಅಭಿವೃದ್ಧಿ ಮತ್ತು ಆಧುನೀಕರಣಕ್ಕೆ ಮೂಲಭೂತ ಕೈಗಾರಿಕೆಗಳು (ಇತರೆ ಎಲ್ಲಾ ಕೈಗಾರಿಕೆ ಉದ್ಯಮಗಳಿಗೆ ಬೇಕಾದ ಬಿಡಿಭಾಗ ಮತ್ತು ಯಂತ್ರಗಳನ್ನು ತಯಾರಿಸುವ ಉದ್ಯಮಗಳು -ಬಿಇಎಲ್’, ಬಿಎಚ್’ಇಎಲ್’ನಂತೆ) ಮತ್ತು ಭಾರೀ ಉದ್ಯಮದ ಸ್ಥಾಪನೆ ಆಧಾರವಾಗಿದೆ ಎಂದು ಅವರು ನಂಬಿದ್ದರು. ಸರ್ಕಾರ, ಮುಖ್ಯವಾಗಿ ಮುಖ್ಯ ಸಾರ್ವಜನಿಕ ಕ್ಷೇತ್ರದ ಉದ್ಯಮಗಳಾದ ಉಕ್ಕು, ಕಬ್ಬಿಣ, ಕಲ್ಲಿದ್ದಲು, ಮತ್ತು ಶಕ್ತಿಗಳಿಗೆ (ವಿದ್ಯತ್) ಬಂಡವಾಳ ಹೂಡಲು ನಿರ್ದೇಶನ ನೀಡಿತು - ಸಬ್ಸಿಡಿಗಳು ಮತ್ತು ರಕ್ಷಣಾ ನೀತಿಯೊಂದಿಗೆ ಅವುಗಳ ಅಭಿವೃದ್ಧಿಗೆ ಉತ್ತೇಜನ ನೀಡಿತು. ಪಂಚವಾರ್ಷಿಕ ಯೋಜನೆಗಳಡಿಯಲ್ಲಿ ಬರಗಾಲ ಮತ್ತು ಆಹಾರದ ಕೊರತೆ ನೀಗಲು ಅನೇಕ ಸಣ್ಣ ಮತ್ತು ದೊಡ್ಡ ನೀರಾವರಿ ಅಣೆಕಟ್ಟುದಳನ್ನು ಕಟ್ಟಲು ಮತ್ತು ಕಾಲುವೆ ನಿರ್ಮಿಸವ ಯೋಜನೆಗಳನ್ನು ಹಮ್ಮಿಕೊಳ್ಳಲಾಯಿತು. ಗ್ರಾಮಾಭಿವೃದ್ಧಿ ಯೋಜನೆಗಳು ಜಾರಿಯಾದವು. ನಿರಕ್ಷರತೆ ನೀಗಲು ಪ್ರಾಥಮಿಕ ಕಡ್ಡಾಯ ಶಿಕ್ಷಣ ಜಾರಿಗೆ ಬಂತು. ಅನೇಕ ಉನ್ನತ ಶಿಕ್ಷಣ ಸಂಸ್ತೆಗಳನ್ನೂ, ತಾತ್ರಿಕ ವೈದ್ಯಕೀಯ ಶಿಕ್ಷನ ಸಂಸ್ಥೆಗಳನ್ನೂ ಆರಂಬಿಸಲಾಯಿತು. ಉದ್ಯೋಗ ಸೃಷ್ಟಿಗಾಗಿ ಸಣ್ಣ ಮತ್ತು ಗುಡಿಕೈಗಾರಿಕೆಗೆ ಉತ್ತೇಜನ ಮತ್ತು ರಕ್ಷಣೆ ನೀಡಲಾಯಿತು. ಶೀತಲ ಸಮರದ ಅವಧಿಯಲ್ಲಿ ಅಲಿಪ್ತ- ನೀತಿಯ- ನೀತಿ ಅರ್ಥಾತ್ ನೆಹರೂ ಅವರು ಭಾರತದ ಕೈಗಾರಿಕಾ ತಳಹದಿಯ ಮೂಲವನ್ನು ಮೊದಲಿನಿಂದ ನಿರ್ಮಿಸಲು ವಿದ್ಯುತ್ ಶಕ್ತಿಗಳನ್ನು ವಿಶ್ವದ ಎರಡೂ ಬಣಗಳಿಂದ ಆರ್ಥಿಕ ಮತ್ತು ತಾಂತ್ರಿಕ ಬೆಂಬಲವನ್ನು ಪಡೆದರು. (ಅಮೇರಿಕಾ ಮತ್ತು ರಷ್ಯಾ ಎರಡು ಶತ್ರು ಬಣ - ಶೀತಲ ಸಮರದಲ್ಲಿ ತೊಡಗಿದ್ದವು) ಸೋವಿಯೆತ್ ಯೂನಿಯನ್ ಮತ್ತು ಪಶ್ಚಿಮ ಜರ್ಮನಿಯ ಸಹಾಯದಿಂದ ಬೊಕೊರೋ ಮತ್ತು ರೂರ್ಕೆಲಾದಲ್ಲಿ ಸ್ಟೀಲ್ ಗಿರಣಿ ಸಂಕೀರ್ಣಗಳನ್ನು ನಿರ್ಮಿಸಲಾಯಿತು. ಗಣನೀಯ ಪ್ರಮಾಣದ ಕೈಗಾರಿಕಾ ಅಭಿವೃದ್ಧಿ ಇತ್ತು. 1950 ರಿಂದ 1965 ರ ನಡುವೆ ಉದ್ಯಮವು ವಾರ್ಷಿಕವಾಗಿ 7.0 ರಷ್ಟು ಏರಿಕೆ ಕಂಡಿದೆ – ಇದರ ಫಲವಾಗಿ 21 ನೇ ಶತಮಾನದ ಆರಂಭದಲ್ಲಿ ಬಹುತೇಕವಾಗಿ ಕೈಗಾರಿಕಾ ಉತ್ಪಾದನೆಯಲ್ಲಿ ಭಾರತವನ್ನು ವಿಶ್ವದ ಏಳನೇ ಅತಿ ದೊಡ್ಡ ಕೈಗಾರಿಕಾ ದೇಶವೆನಿಸಿದೆ. ಇದು ಭಾರತದಲ್ಲಿ 1947 ರಲ್ಲಿ 35 ಕೋಟಿ ಜನಸಂಖ್ಯೆ ಇದ್ದು ಆಹಾರದ ಕೊರತೆಯನ್ನು ಅನುಭವಿಸುತ್ತಿದ್ದ ಭಾರತ 2011 ರ ಸಮಯಕ್ಕೆ 131 ಕೋಟಿಗೆ ಜನಸಂಖ್ಯೆ ಏರಿದರೂ ಅಭವೃದ್ಧಿ ದರವನ್ನು ಕಾಯ್ದು ಕೊಂಡಿದೆ ಮತ್ತ ಆಹಾರ ಧಾನ್ಯಗಳನ್ನು ರಫ್ತುಮಾಡವ ಮಟ್ಟಕ್ಕೆ ಏರಿದೆ ಆದಾಗ್ಯೂ, ನೆಹರು ಯುಗದ ನಂತರ ಭಾರತವು ಆಮದು ಬದಲಿ ಕೈಗಾರಿಕೀಕರಣವನ್ನು(import substitution industrialisation,) ಮುಂದುವರೆಸಿದೆ ಎಂದು ನೆಹರು ಅವರರ ವಿಮರ್ಶಕರು ವಾದಿಸಿದರು, ಇದು ಅದರ ಉತ್ಪಾದನಾ ಕೈಗಾರಿಕೆಗಳ ಅಂತರರಾಷ್ಟ್ರೀಯ ಸ್ಪರ್ಧಾತ್ಮಕತೆಯನ್ನು ದುರ್ಬಲಗೊಳಿಸಿದೆ ಎಂಬುದು ವಾದ. ೧೯೯೦ ರ ವರೆಗೂ ಭಾರತ ಅಂತರರಾಷ್ಟ್ರೀಯ ಸ್ಪರ್ಧಾತ್ಮಕತೆಗೆ ಮುಕ್ತ ಅವಕಾಶ ನೀಡದೆ ಎಚ್ಚರಿಕೆಯ ಅರ್ಥನೀತಿಯನ್ನು ಅನುಸರಿಸಿತು (ನೆಹರೂ ಅವರ "ಹತೋಟಿಯ ಆರ್ಥಿಕತೆ"; "ಸಂಮಿಶ್ರ ಅರ್ಥನೀತಿ"). ನಂತರ ಬಂದ ಪ್ರಧಾನಿಗಳಾದ ಪಿ.ವಿ.ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಭಾರತವನ್ನು ಮುಕ್ತ ಮಾರುಕಟ್ಟೆಗೆ ತೆರೆದರು. ವಿಶ್ವ ವ್ಯಾಪಾರದ ಭಾರತದ ಪಾಲು 1951-1960ರಲ್ಲಿ 1.4 ಶೇಕಡದಿಂದ 1981-1990 ಕ್ಕಿಂತ 0.5 ಪ್ರತಿಶತಕ್ಕೆ ಇಳಿದಿದೆ. ಮತ್ತೊಂದೆಡೆ, ಭಾರತದ ರಫ್ತು ಕಾರ್ಯಕ್ಷಮತೆಯು ಈ ಅವಧಿಯಲ್ಲಿ ನಿರಂತರವಾದ ಸುಧಾರಣೆಯನ್ನು ತೋರಿಸಿದೆ ಎಂದು ವಾದಿಸಲಾಗಿದೆ. ರಫ್ತುಗಳ ಪ್ರಮಾಣ 1951-1960ರಲ್ಲಿ ವಾರ್ಷಿಕ 2.9 ಶೇಕಡ ಇದ್ದುದು 1971-1980ರಲ್ಲಿ 7.6 ಶೇಕಡಕ್ಕೆ ಏರಿಕೆಯಾಯಿತು. ಜಿಡಿಪಿ ಮತ್ತು ಜಿಎನ್ಪಿ ಯು 1950-51 ಮತ್ತು 1964-65 ರ ನಡುವೆ ವಾರ್ಷಿಕವಾಗಿ 3.9 ಮತ್ತು 4.0 ರಷ್ಟು ಏರಿಕೆ ಕಂಡವು. [ಇದು ಬ್ರಿಟಿಷ್ ವಸಾಹತುಶಾಹಿ ಕಾಲದಲ್ಲಿ ಒಂದು ತೀವ್ರವಾದ ವಿರಾಮವಾಗಿತ್ತು. ಆದರೆ, ಯುರೋಪ್ ಮತ್ತು ಪೂರ್ವ ಏಷ್ಯಾದಲ್ಲಿನ ಇತರ ಕೈಗಾರಿಕಾ ಶಕ್ತಿಗಳಿಗೆ ಹೋಲಿಸಿದರೆ, ಬೆಳವಣಿಗೆಯ ದರಗಳನ್ನು ರಕ್ತಹೀನತೆ – ದುರ್ಬಲ ಎಂದು ಪರಿಗಣಿಸಲಾಗಿದೆ. ಭಾರತವು ಪವಾಡ ಆರ್ಥಿಕತೆಗಳ ದೇಶಗಳಿಗಿಂತ (ಜಪಾನ್, ಪಶ್ಚಿಮ ಜರ್ಮನಿ, ಫ್ರಾನ್ಸ್, ಮತ್ತು ಇಟಲಿ) ಹಿಂದುಳಿದಿದೆ. ರಾಜ್ಯ ಯೋಜನೆ, ನಿಯಂತ್ರಣಗಳು, ಮತ್ತು ನಿಬಂಧನೆಗಳು ಆರ್ಥಿಕ ಬೆಳವಣಿಗೆಯನ್ನು ದುರ್ಬಲಗೊಳಿಸುತ್ತವೆ ಎಂದು ವಾದಿಸಲಾಯಿತು. ಯುನೈಟೆಡ್ ಕಿಂಗ್ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ಎರಡೂ ದೇಶಗಳಿಗಿಂತಲೂ ಭಾರತದ ಆರ್ಥಿಕತೆಯು ವೇಗವಾಗಿ ಬೆಳೆಯಲ್ಪಟ್ಟಿದೆ - ಕಡಿಮೆ ಆರಂಭಿಕ ಆದಾಯ ಮತ್ತು ತ್ವರಿತ ಜನಸಂಖ್ಯೆ ಏರಿಕೆಯ ಮಟ್ಟಕ್ಕೆ - ಶ್ರೀಮಂತ ಆದಾಯ ರಾಷ್ಟ್ರಗಳೊಂದಿಗೆ ಹೋಲಿಸಿದಾಗ ಯಾವುದೇ ರೀತಿಯ ಕ್ಯಾಚ್-ಅಪ್’ಗೆ ಬೆಳವಣಿಗೆ ಅಸಮರ್ಪಕವಾಗಿದೆ ಎಂದು ಅರ್ಥ. ನೆಹರು ಅವರ ಕೃಷಿ ನೀತಿಗಳು ನೆಹರು ಅವರ ನಾಯಕತ್ವದಲ್ಲಿ, ಸರ್ಕಾರವು ಕೃಷಿ ಸುಧಾರಣೆ ಮತ್ತು ಕ್ಷಿಪ್ರ ಕೈಗಾರಿಕೀಕರಣವನ್ನು ಕೈಗೊಳ್ಳುವ ಮೂಲಕ ತ್ವರಿತವಾಗಿ ಭಾರತವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸಿತು. ದೊಡ್ಡ ಭೂ ಹಿಡುವಳಿಯನ್ನು ನಿಷೇಧಿಸಲಾಯಿತು. ಪರ್ಯಾಯವಾಗಿ ಯಶಸ್ವಿ ಭೂ ಸುಧಾರಣೆಯನ್ನು ಮಾಡಲಾಯಿತು, ಆದರೆ ಭೂಮಿಯ ಮಾಲೀಕತ್ವವನ್ನು ಮಿತಿಗೊಳಿಸುವುದರ ಮೂಲಕ ಭೂಮಿಯನ್ನು ಮರುಹಂಚಿಕೊಳ್ಳುವ ಪ್ರಯತ್ನ ಕೆಲವು ಕಡೆ ವಿಫಲವಾಯಿತು. ಬೃಹತ್-ಪ್ರಮಾಣದ ಸಹಕಾರಿ ಕೃಷಿಯನ್ನು ಪರಿಚಯಿಸುವ ಪ್ರಯತ್ನಗಳು ವಿಫಲಗೊಳಿಸುವ ಗ್ರಾಮೀಣ ಗಣ್ಯರಿಂದ ನಿರಾಶೆಗೊಳಗಾದವು, ಅವರು ಕಾಂಗ್ರೆಸ್’ನ ಬಲಪಂಥೀಯ ವರ್ಗವನ್ನು ರೂಪಿಸಿದರು ಮತ್ತು ನೆಹರು ಅವರರ ಪ್ರಯತ್ನಗಳನ್ನು ವಿರೋಧಿಸುವಲ್ಲಿ ಸಾಕಷ್ಟು ರಾಜಕೀಯ ಬೆಂಬಲವನ್ನು ಹೊಂದಿದ್ದರು. ಕೃಷಿ ಉತ್ಪಾದನೆಯು 1960 ರ ದಶಕದ ಆರಂಭದವರೆಗೂ ವಿಸ್ತರಿಸಿತು, ಹೆಚ್ಚುವರಿ ಭೂಮಿಯನ್ನು ಕೃಷಿ ಅಡಿಯಲ್ಲಿ ತರಲಾಯಿತು ಮತ್ತು ಕೆಲವು ನೀರಾವರಿ ಯೋಜನೆಗಳು ಪರಿಣಾಮ ಬೀರಲಾರಂಭಿಸಿದವು. ಯುನೈಟೆಡ್ ಸ್ಟೇಟ್ಸ್ನ ಲ್ಯಾಂಡ್-ಗ್ರಾಂಟ್ ಕಾಲೇಜುಗಳು ರೂಪಿಸಿದ ಕೃಷಿ ವಿಶ್ವವಿದ್ಯಾನಿಲಯಗಳ ಸ್ಥಾಪನೆಯು ಆರ್ಥಿಕತೆಯ ಅಭಿವೃದ್ಧಿಯಲ್ಲಿ ನೆರವಾಯಿತು. ಈ ವಿಶ್ವವಿದ್ಯಾಲಯಗಳು ಮೆಕ್ಸಿಕೋ ಮತ್ತು ಫಿಲಿಪೈನ್ಸ್ನಲ್ಲಿ ಆರಂಭದಲ್ಲಿ ಅಭಿವೃದ್ಧಿ ಹೊಂದಿದ ಗೋಧಿ ಮತ್ತು ಅಕ್ಕಿಯ ಉನ್ನತ-ಉತ್ಪತ್ತಿಯ ಪ್ರಭೇದಗಳ ತಳಿಗಳೊಂದಿಗೆ ಕೆಲಸ ಮಾಡಿದ್ದವು, 1960 ರ ದಶಕದಲ್ಲಿ ಹಸಿರು ಉತ್ಪಾದನೆಯನ್ನು ವೈವಿಧ್ಯಗೊಳಿಸಲು ಮತ್ತು ಬೆಳೆಸುವ ಪ್ರಯತ್ನವಾಗಿ “”ಹಸಿರು ಕ್ರಾಂತಿ””ಯನ್ನು ಆರಂಭಿಸಲಾಯಿತು. ಅದೇ ಸಮಯದಲ್ಲಿ ವಿಫಲವಾದ ಮಳೆಗಾಲ- (ಮಾನ್ಸೂನ್ಗಳ) ಸರಣಿಯು ಸ್ಥಿರವಾದ ಪ್ರಗತಿಯಲ್ಲಿಯೂ ಮತ್ತು ಕೃಷಿ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದ ಹೊರತಾಗಿಯೂ ದೇಶದಲ್ಲಿ ಗಂಭೀರ ಆಹಾರ ಕೊರತೆಯನ್ನು ಉಂಟುಮಾಡಿತ್ತು. ದೇಶೀಯ ನೀತಿಗಳು ಇಂದಿನ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳನ್ನು ಒಳಗೊಂಡ ಬ್ರಿಟಿಷ್ ಇಂಡಿಯನ್ ಸಾಮ್ರಾಜ್ಯವನ್ನು ಎರಡು ವಿಧದ ಪ್ರದೇಶಗಳಾಗಿ ವಿಂಗಡಿಸಲಾಯಿತು: ಒಂದು :-ಬ್ರಿಟಿಷ್ ಭಾರತದ ಪ್ರಾಂತ್ಯಗಳು,- ಭಾರತದ ವೈಸ್ರಾಯ್’ಗೆ ಜವಾಬ್ದಾರರಾದ ಬ್ರಿಟಿಷ್ ಅಧಿಕಾರಿಗಳು ನೇರವಾಗಿ ಆಡಳಿತ ನಡೆಸಿದವು ; ಎರಡು :- ಸ್ಥಳೀಯ ಸ್ವಾಯತ್ತತೆಗೆ ಪ್ರತಿಯಾಗಿ ಬ್ರಿಟಿಷ್ ಸಾರ್ವಭೌಮತ್ವವನ್ನು ಗುರುತಿಸಿದ ಸ್ಥಳೀಯ ಆನುವಂಶಿಕ ರಾಜತ್ವದ ಆಡಳಿತಗಾರರ ಆಳ್ವಿಕೆಯ ಅಡಿಯಲ್ಲಿ ಇದ್ದ ಪ್ರದೇಶಗಳು, ಅವು ಹೆಚ್ಚಿನ ಸಂದರ್ಭಗಳಲ್ಲಿ ಒಡಂಬಡಿಕೆಯಿಂದ ಬ್ರಿಟಿಷರ ಅಧೀನದಲ್ಲಿ ಸ್ಥಾಪಿಸಲ್ಪಟ್ಟಿತ್ತು . 1947 ಮತ್ತು 1950 ರ ನಡುವೆ, ರಾಜ ಸಂಸ್ಥಾನಗಳ ಪ್ರಾಂತ್ಯಗಳು ನೆಹರು ಮತ್ತು ಸರ್ದಾರ್ ಪಟೇಲರ ಅಡಿಯಲ್ಲಿ ಭಾರತೀಯ ಒಕ್ಕೂಟಕ್ಕೆ ರಾಜಕೀಯವಾಗಿ ಸಂಯೋಜಿಸಲ್ಪಟ್ಟವು. ಹೆಚ್ಚಿನವುಗಳು ಅಸ್ತಿತ್ವದಲ್ಲಿರುವ ಪ್ರಾಂತ್ಯಗಳಲ್ಲಿ ವಿಲೀನಗೊಂಡವು; ಇತರ ಸಂಸ್ಥಾನ ಪ್ರದೇಶಗಳು ಹೊಸ ಪ್ರಾಂತ್ಯಗಳಾಗಿ ರೂಪಿಸಲ್ಪಟ್ಟವು, ಉದಾಹರಣೆಗೆ ರಜಪುತಾನ, ಹಿಮಾಚಲ ಪ್ರದೇಶ, ಮಧ್ಯಭಾರತ್, ಮತ್ತು ವಿಂಧ್ಯ-ಪ್ರದೇಶ, ಅನೇಕ ರಾಜಪ್ರಭುತ್ವದ ರಾಜ್ಯಗಳು; ಮೈಸೂರು, ಹೈದರಾಬಾದ್, ಭೋಪಾಲ್, ಮತ್ತು ಬಿಲಾಸ್ಪುರ ಸೇರಿದಂತೆ ಕೆಲವು, ಪ್ರತ್ಯೇಕ ಪ್ರಾಂತ್ಯಗಳಾಗಿ ಮಾರ್ಪಟ್ಟವು. 1935 ರ ಭಾರತ ಸರ್ಕಾರ ಕಾಯಿದೆ ಭಾರತದ ಸಂವಿಧಾನಾತ್ಮಕ ಕಾನೂನಾಗಿದ್ದು ಅದನ್ನು ಹೊಸ ಸಂವಿಧಾನವನ್ನು ಅಂಗೀಕರಿಸುವ ವರೆಗೆ ಉಳಿಸಿಕೊಳ್ಳಲಾಯಿತು. 1950 ರ ಜನವರಿ 26 ರಂದು ಜಾರಿಗೊಳಿಸಲಾದ ಹೊಸ ಸಂವಿಧಾನವು ಭಾರತದ ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯವನ್ನಾಗಿ ಮಾಡಿತು. ನೆಹರು ಹೊಸ ಗಣರಾಜ್ಯವನ್ನು "ರಾಜ್ಯಗಳ ಒಕ್ಕೂಟ" ಎಂದು ಘೋಷಿಸಿದರು. 1950 ರ ಸಂವಿಧಾನವು ಮುಖ್ಯವಾದ ಮೂರು ವಿಧದ ರಾಜ್ಯಗಳನ್ನು ಹೊಂದಿದ ವಿಶಿಷ್ಠ ರೂದ್ದಾಗಿತ್ತು: ಬ್ರಿಟಿಷ್ ಭಾರತದ ಮಾಜಿ ಗವರ್ನರ್ಗಳ ಪ್ರಾಂತ್ಯಗಳಾಗಿರುವ ಪಾರ್ಟ್ ‘ಎ’ ರಾಜ್ಯಗಳು; ಚುನಾಯಿತ ಗವರ್ನರ್ ಮತ್ತು ರಾಜ್ಯ ಶಾಸಕಾಂಗದಿಂದ ಆಳಲ್ಪಟ್ಟ ರಾಜ್ಯಗಳು. ಪಾರ್ಟ್ ಬಿ ರಾಜ್ಯಗಳು. ಹಿಂದಿನ ರಾಜವಂಶದ ರಾಜ್ಯಗಳು ಅಥವಾ ಸಂಸ್ಥಾನದ ಗುಂಪುಗಳಾಗಿದ್ದವು, ಇದು ಸಾಮಾನ್ಯವಾಗಿ ರಾಜಪ್ರಮುಖರಿಂದ ಆಳ್ವಿಕೆಯಲ್ಲಿರುವುವು. ಮತ್ತು ಒಂದು ಚುನಾಯಿತ ಶಾಸಕಾಂಗ ಹೊಂದಿದ್ದವು. ರಾಜಪ್ರಮುಖನನ್ನು ಭಾರತದ ರಾಷ್ಟ್ರಪತಿ ನೇಮಕ ಮಾಡಿದರು. ಪಾರ್ಟ್ ಸಿ ರಾಜ್ಯಗಳು ಮಾಜಿ ಮುಖ್ಯ ಆಯುಕ್ತರ ಪ್ರಾಂತ್ಯಗಳು ಮತ್ತು ಕೆಲವು ರಾಜಪ್ರಭುತ್ವ ರಾಜ್ಯಗಳನ್ನು ಒಳಗೊಂಡಿತ್ತು, ಮತ್ತು ಪ್ರತಿಯೊಂದೂ ಭಾರತದ ರಾಷ್ಟ್ರಪತಿಯಿಂದ ನೇಮಕವಾದ ಮುಖ್ಯ ಆಯುಕ್ತರ ಆಡಳಿತದಲ್ಲಿದ್ದವು. ಏಕ ಪಾರ್ಟ್ ಡಿ ರಾಜ್ಯವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಇದು ಕೇಂದ್ರ ಸರ್ಕಾರದಿಂದ ನೇಮಕವಾದ ಲೆಫ್ಟಿನೆಂಟ್ ಗವರ್ನರ್ ಆಡಳಿತಕ್ಕೆ ಒಳಪಟ್ಟಿತು. ಡಿಸೆಂಬರ್ 1953 ರಲ್ಲಿ, ರಾಜ್ಯಗಳ ರಚನೆಗಾಗಿ ರಾಜ್ಯಗಳ ರಚನೆಗೆ ನೆಹರು ಸಂಸ್ಥಾನ ಪುನರ್ ಸಂಘಟನೆ ಆಯೋಗವನ್ನು ನೇಮಿಸಿದರು. ಇದನ್ನು ನ್ಯಾಯಮೂರ್ತಿ ಫಜಲ್ ಅಲಿಯ ನೇತೃತ್ವದಲ್ಲಿ ಮತ್ತು ಆಯೋಗವನ್ನು ಸ್ವತಃ ಫಜಲ್ ಅಲಿ ಕಮಿಷನ್ ಎಂದು ಕರೆಯಲಾಗುತ್ತಿತ್ತು. ಈ ಆಯೋಗದ ಕಾರ್ಯಗಳನ್ನು ಡಿಸೆಂಬರ್ 1954 ರಿಂದ ನೆಹರು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದ ಗೋವಿಂದ ಬಲ್ಲಭ್ ಪಂತ್ ಅವರು ಮೇಲ್ವಿಚಾರಣೆ ಮಾಡಿದರು. 1955 ರಲ್ಲಿ ಭಾರತದ ರಾಜ್ಯಗಳ ಮರುಸಂಘಟನೆಗಾಗಿ ಆಯೋಗವು ವರದಿಯನ್ನು ರಚಿಸಿತು. ಏಳನೇ ತಿದ್ದುಪಡಿಯಲ್ಲಿ, ಭಾಗ ಎ, ಭಾಗ ಬಿ, ಭಾಗ ಸಿ, ಮತ್ತು ಭಾಗ ಡಿ ರಾಜ್ಯಗಳ (Part A, Part B, Part C, and Part D states was abolished) ನಡುವಿನ ಅಸ್ತಿತ್ವದಲ್ಲಿರುವ ವ್ಯತ್ಯಾಸವನ್ನು ರದ್ದುಪಡಿಸಲಾಯಿತು. ಪಾರ್ಟ್ ಎ ಮತ್ತು ಪಾರ್ಟ್ ಬಿ ರಾಜ್ಯಗಳ ನಡುವಿನ ವ್ಯತ್ಯಾಸವನ್ನು ತೆಗೆದುಹಾಕಲಾಯಿತು, ಇದನ್ನು "ರಾಜ್ಯಗಳು" ಎಂದು ಕರೆಯಲಾಗುತ್ತದೆ. ಒಂದು ಹೊಸ ರೀತಿಯ ಘಟಕ, ಕೇಂದ್ರಾಡಳಿತ ಪ್ರದೇಶ (ಯೂನಿಯನ್ ಪ್ರದೇಶ), ವಿಭಾಗ ಅ ಅಥವಾ ಭಾಗ ಆ ಸ್ಥಿತಿಯಂತೆ ವರ್ಗೀಕರಣವನ್ನು ಬದಲಾಯಿಸಿತು. ನೆಹರು ಭಾರತೀಯರಲ್ಲಿ ಸಾಮಾನ್ಯತೆಯನ್ನು ಮತ್ತು ಪಾನ್-ಇಂಡಿಯನಿಸಮ್ ಅನ್ನು ಉತ್ತೇಜಿಸಿದರು. ಧಾರ್ಮಿಕ ಅಥವಾ ಜನಾಂಗೀಯ ನೀತಿಗಳ ಮೇಲೆ ರಾಜ್ಯಗಳನ್ನು ಮರುಸಂಘಟಿಸಲು ಅವರು ನಿರಾಕರಿಸಿದರು. ಪಾಶ್ಚಾತ್ಯ ವಿದ್ವಾಂಸರು ನೆಹರು ಅವರನ್ನು ಆಧುನಿಕ ಗಣರಾಜ್ಯವಾಗಿ ರಾಜ್ಯಗಳ ಏಕೀಕರಣ ಮಾಡಿದ್ದಕ್ಕಾಗಿ ಪ್ರಶಂಸಿಸಿದ್ದಾರೆ ಆದರೆ ಈ ಮರುಸಂಗಟನೆಯ ಕಾನೂನು (ಆಕ್ಟ್) ಭಾರತದಲ್ಲಿ ಸಾರ್ವತ್ರಿಕವಾಗಿ ಅಂಗೀಕರಿಸಲ್ಪಟ್ಟಿಲ್ಲ. ಸಾಮಾಜಿಕ ನೀತಿಗಳು ಶಿಕ್ಷಣ ಜವಾಹರಲಾಲ್ ನೆಹರೂ ಭಾರತದ ಮಕ್ಕಳ ಮತ್ತು ಯುವಜನರಿಗೆ ಶಿಕ್ಷಣದ ಭಾವೋದ್ರಿಕ್ತ ವಕೀಲರಾಗಿದ್ದರು, ಇದು ಭಾರತದ ಭವಿಷ್ಯದ ಪ್ರಗತಿಗೆ ಅವಶ್ಯಕವೆಂದು ನಂಬಿದ್ದರು. ಅವರ ಸರ್ಕಾರವು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯನ್ನು ಒಳಗೊಂಡಂತೆ ಉನ್ನತ ಶಿಕ್ಷಣದ ಅನೇಕ ಸಂಸ್ಥೆಗಳ ಸ್ಥಾಪನೆಯನ್ನು ಕೈಗೊಂಡಿತು [142] ಭಾರತದ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣವನ್ನು ಖಾತರಿಪಡಿಸಿಕೊಳ್ಳಲು ತನ್ನ ಐದು ವರ್ಷಗಳ ಯೋಜನೆಯಲ್ಲಿ ನೆಹರೂ ಒಂದು ಬದ್ಧತೆಯನ್ನು ಕೂಡ ವಿವರಿಸಿದ್ದಾರೆ. ಈ ಉದ್ದೇಶಕ್ಕಾಗಿ, ಸಾಮೂಹಿಕ ಹಳ್ಳಿಯ ದಾಖಲಾತಿ ಕಾರ್ಯಕ್ರಮಗಳ ಸೃಷ್ಟಿ ಮತ್ತು ಸಾವಿರಾರು ಶಾಲೆಗಳ ನಿರ್ಮಾಣವನ್ನು ನೆಹರೂ ಕೈಗೊಂಡರು. ಅಪೌಷ್ಟಿಕತೆಗೆ ಹೋರಾಡಲು ಮಕ್ಕಳಿಗೆ ಉಚಿತ ಹಾಲು ಮತ್ತು ಆಹಾರವನ್ನು ಒದಗಿಸುವಂತಹ ಉಪಕ್ರಮಗಳನ್ನು ಸಹ ನೆಹರೂ ಪ್ರಾರಂಭಿಸಿದರು. ವಯಸ್ಕರಲ್ಲಿ, ವಿಶೇಷವಾಗಿ ವಯಸ್ಕರಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ವಯಸ್ಕರ ಶಿಕ್ಷಣ ಕೇಂದ್ರಗಳು, ವೃತ್ತಿಪರ ಮತ್ತು ತಾಂತ್ರಿಕ ಶಾಲೆಗಳನ್ನು ಆಯೋಜಿಸಲಾಯಿತು. [143] ವೈವಾಹಿಕ ಕಾನೂನು ನೆಹರೂ ನೇತೃತ್ವದಲ್ಲಿ, ಭಾರತೀಯ ಸಂಸತ್ತು ಜಾತಿ ತಾರತಮ್ಯವನ್ನು ಅಪರಾಧೀಕರಿಸುವ ಮತ್ತು ಕಾನೂನು ಹಕ್ಕುಗಳು ಮತ್ತು ಮಹಿಳೆಯರ ಸಾಮಾಜಿಕ ಸ್ವಾತಂತ್ರ್ಯವನ್ನು ಹೆಚ್ಚಿಸಲು ಹಿಂದೂ ಕಾನೂನಿಗೆ ಹಲವು ಬದಲಾವಣೆಗಳನ್ನು ಜಾರಿಗೊಳಿಸಲಾಯಿತು. ನೆಹರೂ ಅವರೇ ನಿರ್ದಿಷ್ಟವಾಗಿ ರಾಜ್ಯ ನೀತಿಯ ನಿರ್ದೇಶಕ ತತ್ವಗಳ ಅಡಿಯಲ್ಲಿ ಭಾರತೀಯ ಸಂವಿಧಾನದ “44 ನೇ ಲೇಖ”ವನ್ನು ಬರೆದಿದ್ದಾರೆ: "ರಾಜ್ಯವು ಭಾರತದ ಭೂಪ್ರದೇಶದಲ್ಲೆಲ್ಲಾ ಸಮಾನ ನಾಗರಿಕ ಸಂಹಿತೆಯನ್ನು ನೀಡಲು ಪ್ರಯತ್ನಿಸಬೇಕು". ಲೇಖವು ಭಾರತದ ಜಾತ್ಯತೀತತೆಯ ಆಧಾರವನ್ನು ರೂಪಿಸಿದೆ. ಆದಾಗ್ಯೂ, ಕಾನೂನಿನ ಅಸಮಂಜಸವಾದ ಅನ್ವಸುವಿಕೆಗಾಗಿ ನೆಹರು ಅವರನ್ನು ಟೀಕಿಸಿದ್ದಾರೆ. ಮುಖ್ಯವಾಗಿ, ನೆಹರೂ ಮುಸ್ಲಿಮರಿಗೆ ತಮ್ಮ ವೈಯಕ್ತಿಕ ಕಾನೂನುಗಳಲ್ಲಿ ಮದುವೆ ಮತ್ತು ಪರಂಪರೆಯ ವಿಷಯಗಳಲ್ಲಿ ಇರಿಸಿಕೊಳ್ಳಲು ಅವಕಾಶ ನೀಡಿದರು ಎಂಬುದು ಟೀಕಕಾರರನಿಲುವು . ಗೋವಾದ ಸಣ್ಣ ರಾಜ್ಯದಲ್ಲಿ, ಹಳೆಯ ಪೋರ್ಚುಗೀಸ್ ಕುಟುಂಬ ಕಾನೂನುಗಳನ್ನು ಆಧರಿಸಿ ನಾಗರಿಕ ಸಂಹಿತೆಯು ಮುಂದುವರೆಸಲು ಅನುಮತಿ ನೀಡಲಾಯಿತು, ಮತ್ತು ಮುಸ್ಲಿಮರ ವೈಯಕ್ತಿಕ ಕಾನೂನನ್ನು ನೆಹರು ನಿಷೇಧಿಸಿದ್ದರು. 1961 ರಲ್ಲಿ ಭಾರತದಿಂದ ಗೋವಾವನ್ನು ಸ್ವಾಧೀನಪಡಿಸಿಕೊಳ್ಳುವುದರ ಪರಿಣಾಮವಾಗಿ, ನೆಹರೂ, ಜನರು ತಮ್ಮ ಕಾನೂನುಗಳನ್ನು ಹಾಗೇ ಉಳಿಸಬಹುದೆಂದು ಭರವಸೆ ನೀಡಿದರು. ಇದು ಆಯ್ದ ಜಾತ್ಯತೀತತೆಯ ಆರೋಪಕ್ಕೆ ಕಾರಣವಾಗಿದೆ ಎಂದು ಕೆಲವರು ಆಕ್ಷೇಪಿಸುತ್ತಾರೆ. ನೆಹರೂ ಅವರು ಮುಸಲ್ಮಾನರಿಗೆ ಕಾನೂನಿನ ತಿದ್ದುಪಡಿಗೆ ವಿನಾಯಿತಿ ನೀಡಿದ್ದರು ಮತ್ತು ಅವುಗಳು ಹಾಗೆಯೇ ಇದ್ದವು, ಅವರು 1954 ರಲ್ಲಿ ವಿಶೇಷ ಮದುವೆ ಕಾಯಿದೆಯನ್ನು ಮಂಜೂರು ಮಾಡಿಸಿದರು. ಈ ಕಾನೂನಿನ ಹಿಂದಿನ ಕಲ್ಪನೆಯೆಂದರೆ ಭಾರತದಲ್ಲಿ ಎಲ್ಲರಿಗೂ ವೈಯಕ್ತಿಕ ಕಾನೂನಿನ ಹೊರಗೆ ಮದುವೆಯಾಗಲು ಒಂದು ನಾಗರಿಕ ವಿವಾಹಕ್ಕೆ ಅವಕಾಶ ನೀಡುವುದು. ಎಂದಿನಂತೆ ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿ ಕಾನೂನು ಎಲ್ಲಾ ಭಾರತಕ್ಕೂ ಅನ್ವಯಿಸುತ್ತದೆ (ಮತ್ತೆ ಆಯ್ದ ಜಾತ್ಯತೀತವಾದದ ಆರೋಪಗಳಿಗೆ ಕಾರಣವಾಯಿತು). ಅನೇಕ ವಿಷಯಗಳಲ್ಲಿ, ಹಿಂದೂ ಮದುವೆ ಕಾನೂನು 1955 ರದಕ್ಕೆ ಹೋಲುತ್ತದೆ, ಹಿಂದೂಗಳ ಬಗೆಗಿನ ಕಾನೂನು ಜಾತ್ಯತೀತವಾಗಿದೆಯೆಂಬ ಕಲ್ಪನೆಯನ್ನು ನೀಡುತ್ತದೆ. ವಿಶೇಷ ವಿವಾಹ ಕಾಯಿದೆಯಡಿ ಮುಸ್ಲಿಮರು ಅದರ ಅಡಿಯಲ್ಲಿ ಮದುವೆಯಾಗಲು ಅವಕಾಶ ಮಾಡಿಕೊಟ್ಟರು ಮತ್ತು ಅದರ ಮೂಲಕ ರಕ್ಷಣೆಗಳನ್ನು ಉಳಿಸಿಕೊಂಡರು, ಸಾಮಾನ್ಯವಾಗಿ ಮುಸ್ಲಿಮ್ ಮಹಿಳೆಯರಿಗೆ ಪ್ರಯೋಜನಕಾರಿ, ಅದು ಅವರ ವೈಯಕ್ತಿಕ ಕಾನೂನಿನಲ್ಲಿ ಕಂಡುಬಂದಿಲ್ಲ. ಈ ಕನೂನು ಅಡಿಯಲ್ಲಿ ಬಹುಪತ್ನಿತ್ವ ಕಾನೂನುಬಾಹಿರವಾಗಿತ್ತು ಮತ್ತು ಆಯಾ ಮುಸ್ಲಿಂ ವೈಯಕ್ತಿಕ ಕಾನೂನಿನ ಬದಲಾಗಿ ಭಾರತೀಯ ಉತ್ತರಾಧಿಕಾರ ಕಾಯಿದೆ ಮೂಲಕ ಉತ್ತರಾಧಿಕಾರ ಮತ್ತು ಉತ್ತರಾಧಿಕಾರವನ್ನು ನಿಯಂತ್ರಿಸಲಾಗುತ್ತದೆ. ವಿಚ್ಛೇದನವು ಜಾತ್ಯತೀತ ಕಾನೂನಿನಿಂದ ನಿಯಂತ್ರಿಸಲ್ಪಡುತ್ತದೆ, ಮತ್ತು ವಿಚ್ಛೇದಿತ ಹೆಂಡತಿಯ ನಿರ್ವಹಣೆ ನಾಗರಿಕ (ಸಿವಿಲ್) ಕಾನೂನಿನಲ್ಲಿ ರೂಪಿಸಲಾದ ಸಾಲುಗಳಲ್ಲಿ ಇರುತ್ತದೆ. ಸಾಮಾಜಿಕವಾಗಿ ತುಳಿತಕ್ಕೊಳಗಾದ ಸಮುದಾಯಗಳಿಗೆ ಮೀಸಲಾತಿ ಪರಿಶಿಷ್ಟ ಜಾತಿ ಮತ್ತು ನಿಗದಿತ ಬುಡಕಟ್ಟು ಜನರು ಎದುರಿಸುತ್ತಿರುವ ಸಾಮಾಜಿಕ ಅಸಮಾನತೆಗಳನ್ನು ಮತ್ತು ದುಷ್ಪರಿಣಾಮಗಳನ್ನು ನಿರ್ಮೂಲನೆ ಮಾಡಲು ಸರ್ಕಾರಿ ಸೇವೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿ ವ್ಯವಸ್ಥೆ ರಚಿಸಲಾಗಿದೆ. ನೆಹರು ಜಾತ್ಯತೀತತೆ ಮತ್ತು ಧಾರ್ಮಿಕ ಸಾಮರಸ್ಯವನ್ನು ಉತ್ತೇಜಿಸಿದರು , ಅಲ್ಪಸಂಖ್ಯಾತರು ಸರ್ಕಾರದಲ್ಲಿ ಪ್ರತಿನಿಧಿಸುವುದನ್ನು ಹೆಚ್ಚಿಸಿದರು. ಭಾಷಾ ನೀತಿ ಹಿಂದಿ ಭಾಷೆಯನ್ನು ಭಾರತೀಯ ರಾಷ್ಟ್ರದ ವ್ಯವಹಾರ ಭಾಷೆ (ಲಿಂಗ್ವಾ-ಫ್ರಾಂಕ) ಎಂದು ಪ್ರಾಮುಖ್ಯತೆ ಕೊಡುವ ಕಾಂಗ್ರೆಸ್ ಪಕ್ಷದ ನೇತೃತ್ವವನ್ನು ನೆಹರು ಅವರು ವಹಿಸಿದರು, ಇದು ಹಿಂದಿಯಲ್ಲಿ ಮಾತನಾಡದೆ ಬೇರೆ ಭಾಷೆಯವವರೊಂದಿಗಿನ ಸಮಗ್ರ ಮತ್ತು ವಿರೋಧ ವಿಚಾರದ ಚರ್ಚೆಯ ನಂತರ, ಹದಿನೈದು ವರ್ಷಗಳ ಕಾಲ ಇಂಗ್ಲಿಷ್ ಭಾಷೆಯನ್ನು ಅಧಿಕೃತ ಭಾಷೆಯಾಗಿ ಮುಂದುವರೆಸುವ ಷರತ್ತಿನೊಂದಿಗೆ 1950 ರಲ್ಲಿ ಭಾರತದ ಅಧಿಕೃತ ಭಾಷೆಯಾಗಿ ಹಿಂದಿಯನ್ನು ಸ್ವೀಕರಿಸಲಾಯಿತು, ನಂತರ ಹಿಂದಿ ಏಕೈಕ ಅಧಿಕೃತ ಭಾಷೆಯಾಯಿತು. 1965 ರ ನಂತರ ಹಿಂದಿ ಏಕೈಕ ಅಧಿಕೃತ ಭಾಷೆಗೆ ಭಾರತೀಯ ಸರ್ಕಾರವು ಮಾಡಿದ ಪ್ರಯತ್ನಗಳು ಹಿಂದಿನದಕ್ಕಿಂತ ಹೆಚ್ಚಾಗಿ ಹಿಂದಿ ಮಾತೃಭಾಷೆಯಲ್ಲದ ಹಲವು ರಾಜ್ಯಗಳಿಗೆ ಸ್ವೀಕಾರಾರ್ಹವಾಗಲಿಲ್ಲ. ಅವರು ಇಂಗ್ಲಿಷ್ ಬಳಕೆಯನ್ನು ಮುಂದುವರಿಸಲು ಬಯಸಿದರು. ದ್ರಾವಿಡರ್ ಕಳಗಂನ ಉಪಶಾಖೆಯಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಹಿಂದಿಗೆ ವಿರೋಧವನ್ನು ಮಾಡುವ ನಾಯಕತ್ವ ವಹಿಸಿತು. ಅವರ ಭಯವನ್ನು ಕಡಿಮೆ ಮಾಡಲು,1965 ರಲ್ಲಿ, 1965 ರ ಬಳಿಕವೂ ಇಂಗ್ಲಿಷ್‍ನ್ನು ಮುಂದುವರಿದ-ಬಳಕೆಯಾಗಿ ಅಧಿಕೃತ ಭಾಷೆ ಕಾಯಿದೆಯಡಿ ನೆಹರೂ ಜಾರಿಗೆ ತಂದರು. ಕಾಯಿದೆಯ ಪಠ್ಯವು ಡಿಎಮ್’ಕೆಯ ಬೇಡಿಕೆಯನ್ನು ಪೂರೈಸಲಿಲ್ಲ ಮತ್ತು ಅವರ ಭರವಸೆಗಳನ್ನು ಭವಿಷ್ಯದ ಆಡಳಿತಗಳು ಗೌರವಿಸದೆ ಇರಬಹುದು ಎಂಬ ಅವರ ಸಂದೇಹವನ್ನು ಹೆಚ್ಚಿಸಿತು. ನೆಹರೂರ ಮಗಳು, ಇಂದಿರಾ ಗಾಂಧಿಯವರ ಹೆಚ್ಚಿನ ಒತ್ತಡದಲ್ಲಿ, ಇಂಗ್ಲಿಷ್ ಅಲ್ಲದ ಹಿಂದಿ ಮಾತನಾಡುವ ರಾಜ್ಯಗಳು ಬಯಸಿದಷ್ಟು ಕಾಲ ಅಧಿಕೃತ ಭಾಷೆಯಾಗಿ ಇಂಗ್ಲಿಷ್ ಅನ್ನು ಮುಂದುವರೆಸಬಹುದೆಂದು ಭರವಸೆ ನೀಡಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರಧಾನಮಂತ್ರಿಯಾದ ಸಂದರ್ಭದಲ್ಲಿ ಈ ವಿವಾದವನ್ನು ಬಗೆಹರಿಸಲಾಯಿತು. ಅಧಿಕೃತ ಭಾಷೆ ಕಾಯ್ದೆ 1967 ರಲ್ಲಿ ಇಂದಿರಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕೃತ ಭಾಷೆಯಾಗಿ ಹಿಂದಿ ಮತ್ತು ಇಂಗ್ಲಿಷ್’ಗಳನ್ನು ಅನಿರ್ದಿಷ್ಟ ಬಳಕೆಗೆ ಖಾತ್ರಿಪಡಿಸುವಂತೆ ತಿದ್ದುಪಡಿ ಮಾಡಿದೆ. ಇದು ಭಾರತೀಯ ಗಣರಾಜ್ಯದ ಪ್ರಸಕ್ತ "ದ್ವಿಭಾಷಾ ವಾಸ್ತವಿಕ ಅನಿರ್ದಿಷ್ಟ ನೀತಿ" ಯನ್ನು ಪರಿಣಾಮಕಾರಿಯಾಗಿ ಬಗೆಹರಿಸಿತು. ವಿದೇಶಾಂಗ ನೀತಿ ಇದನ್ನೂ ನೋಡಿ: ಭಾರತ ಮತ್ತು ಅಲಿಪ್ತ ಚಳವಳಿ ಕಾಮನ್ವೆಲ್ತ್ 1947 ರಿಂದ 1964 ರವರೆಗೂ ನೆಹರೂ ಹೊಸದಾಗಿ ಸ್ವತಂತ್ರ ಪಡೆದ ಭಾರತವನ್ನು ಮುನ್ನಡೆಸಿದರು. ಯುನೈಟೆಡ್ ಸ್ಟೇಟ್ಸ್ ಮತ್ತು ಸೋವಿಯೆತ್ ಯೂನಿಯನ್ ಎರಡೂ ಶೀತಲ ಯುದ್ಧದ ಉದ್ದಕ್ಕೂ ಭಾರತವನ್ನು ಮಿತ್ರರಾಷ್ಟ್ರನ್ನಾಗಿ ಮಾಡಲು ಸ್ಪರ್ಧಿಸಿದವು. ಬ್ರಿಟಿಷ್ ಸಾಮ್ರಾಜ್ಯದೊಂದಿಗೆ ನೆಹರು ಸಹ ಉತ್ತಮ ಸಂಬಂಧವನ್ನು ಹೊಂದಿದ್ದರು. ಲಂಡನ್ನ ಘೋಷಣೆಯಡಿಯಲ್ಲಿ, ಭಾರತವು 1950 ರ ಜನವರಿಯಲ್ಲಿ ಅದು ಗಣರಾಜ್ಯವಾದಾಗ ಅದು ಕಾಮನ್ವೆಲ್ತ್ ರಾಷ್ಟ್ರಗಳನ್ನು ಸೇರಿಕೊಂಡಿತು ಮತ್ತು ಬ್ರಿಟಿಷ್ ರಾಜನನ್ನು ತನ್ನ ಸ್ವತಂತ್ರ ಸದಸ್ಯ ರಾಷ್ಟ್ರಗಳ ಮುಕ್ತ ಕಾಮನ್ವೆಲ್ತ್ ಸಂಘಟನೆಯ ಸಂಕೇತವೆಂದು ಪರಿಗಣಿಸಿತು. "ಕಾಮನ್ವೆಲ್ತ್ನ ಇತರೆ ರಾಷ್ಟ್ರಗಳು ಭಾರತದ ಈ ಸಂಘಟನೆಯ ಸದಸ್ಯತ್ವವನ್ನು ಒಪ್ಪಿದವು. “ಮರಳಿ ಮನೆಗೆ” ಈ ಕ್ರಮಕ್ಕೆ ಪ್ರತಿಕ್ರಿಯೆ ಅನುಕೂಲಕರವಾಗಿತ್ತು; ನೆಹರೂರ ನಿರ್ಧಾರವನ್ನು ಅತಿ ಎಡದವರು ಮತ್ತು ಅತಿ-ಬಲಪಂಥಿಗಳು ಟೀಕಿಸಿದರು.[154][155] ವಿದೇಶಿ ನೀತಿ - ಅಲಿಪ್ತ ಚಳುವಳಿ ಅಂತರಾಷ್ಟ್ರೀಯ ಮಟ್ಟದಲ್ಲಿ, ನೆಹರೂ ಶಾಂತಿಪ್ರಿಯರಾಗಿದ್ದರು ಮತ್ತು ವಿಶ್ವಸಂಸ್ಥೆಯ ಪ್ರಬಲ ಬೆಂಬಲಿಗರಾಗಿದ್ದರು. ಅವರು ಯುಎಸ್ ಮತ್ತು ಯುಎಸ್ಎಸ್ಆರ್ ನೇತೃತ್ವದ ರಾಷ್ಟ್ರಗಳ ಪ್ರತಿಸ್ಪರ್ಧಿ ಬ್ಲಾಕ್’ಗಳ ನಡುವಿನ ತಟಸ್ಥತೆಯನ್ನು ದೃಢಪಡಿಸುವ ಅಲಿಪ್ತ ಚಳುವಳಿಯನ್ನು, ಅಲಿಪ್ತ ನೀತಿಯನ್ನು ಅನುಸರಿಸಿದರು ಮತ್ತು ಆ ನೀತಿಯ ಸಹ-ಸಂಸ್ಥಾಪಕರಾಗಿದ್ದರು. ಅಲಿಪ್ತ ನೀತಿಯನ್ನು ಅನುಸರಿಸಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೈನಾಕ್ಕೆ ಅಲ್ಲಿ ಸರ್ಕಾರ ರಚನೆಯಾದ, ಶೀಘ್ರದಲ್ಲೇ ಮನ್ನಣೆ ನೀದಿದರು. (ಹೆಚ್ಚಿನ ಪಾಶ್ಚಿಮಾತ್ಯ ತಂಡವು ತೈವಾನ್ನೊಂದಿಗೆ ಸಂಬಂಧವನ್ನು ಮುಂದುವರೆಸಿತು), ನೆಹರೂ ಯುನೈಟೆಡ್ ನೇಷನ್ಸ್’ನಲ್ಲಿ ಅದರ ಸೇರ್ಪಡೆಗಾಗಿ ವಾದಿಸಿದರು ಮತ್ತು ಕೊರಿಯದೊಂದಿಗಿನ ಸಂಘರ್ಷದಲ್ಲಿ ಚೀನಿಯರನ್ನು ಆಕ್ರಮಣಕಾರಿ ಎಂದು ಹೇಳಲು ನಿರಾಕರಿಸಿದರು. ಅವರು 1950 ರಲ್ಲಿ ಚೀನಾದೊಂದಿಗೆ ಆದರದ ಮತ್ತು ಸೌಹಾರ್ದ ಸಂಬಂಧಗಳನ್ನು ಸ್ಥಾಪಿಸಲು ಪ್ರಯತ್ನಿಸಿದರು ಮತ್ತು ಕಮ್ಯೂನಿಸ್ಟ್ ರಾಜ್ಯಗಳು ಮತ್ತು ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿ ಪಾಶ್ಚಿಮಾತ್ಯ ಬ್ಲಾಕ್’ಗಳ ನಡುವಿನ ಕಂದಕ ಮತ್ತು ಉದ್ವಿಗ್ನತೆಯನ್ನು ಕಡಿಮೆಮಾಡಲು ಪ್ರಯತ್ನಿಸಿದರು. ರಕ್ಷಣೆ ಮತ್ತು ಪರಮಾಣು ನೀತಿ 1947 ರಲ್ಲಿ ರಾಜಕೀಯ ಮತ್ತು ಜಾಗತಿಕ ರಾಜತಂತ್ರದ ವಾಸ್ತವತೆಗೆ ನೆಹರೂ ಕುರುಡರಾಗಿರಲಿಲ್ಲ. 1949 ರಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಅಡಿಪಾಯವನ್ನು ಹಾಕಿದಾಗ,- "ನಾವು, ತಲೆಮಾರುಗಳ ಬಗ್ಗೆ ಮಾತನಾಡಿದ್ದೇವೆ ಮತ್ತು ಎಲ್ಲವನ್ನೂ ಪ್ರಯತ್ನಿಸುತ್ತಿದ್ದೇವೆ. ನಮ್ಮ ಸೈನ್ಯ, ನೌಕಾಪಡೆ ಮತ್ತು ವಾಯುಪಡೆಗಳನ್ನು ವೈಭವೀಕರಿಸುವ ಒಂದು ಅರ್ಥದಲ್ಲಿ, ಅದು ಶಾಂತಿಯುತವಾದ ರೀತಿಯಲ್ಲಿ ಮತ್ತು ಅಹಿಂಸೆಯನ್ನು ಅನುಷ್ಠಾನಗೊಳಿಸುತ್ತದೆ.ಇದು ವಿಚಿತ್ರವಾಗಿದ್ದರೂ, ಅದು ಜೀವನದ ವಿಚಿತ್ರತೆಯನ್ನು ಪ್ರತಿಬಿಂಬಿಸುತ್ತದೆ ಜೀವನವು ತಾರ್ಕಿಕವಾದರೂ ಎಲ್ಲಾ ಅನಿಶ್ಚಯತೆಗಳನ್ನು ಎದುರಿಸಬೇಕಾಗಿದೆ ಮತ್ತು ನಾವು ಅವುಗಳನ್ನು ಎದುರಿಸಲು ತಯಾರಿಲ್ಲದಿದ್ದರೆ, ನಾವು ಅಡಿಗೆ/ಕೆಳಗೆ ಹೋಗುತ್ತೇವೆ. ನಾವೆಲ್ಲರೂ ಕಳೆದುಕೊಂಡ ಮಹಾತ್ಮ ಗಾಂಧಿಯವರ ಹೊರತು ಅಹಿಂಸಾ ತತ್ವದ ಹೆಚ್ಚಿನ ರಾಜಕುಮಾರ ಮತ್ತು ಹರಿಕಾರ ಮತ್ತೊಬ್ಬ ಇಲ್ಲ. ಅವರು ಶರಣಾಗುವುದಕ್ಕಿಂತ, ವಿಫಲಗೊಳ್ಳುವುದಕ್ಕಿಂತ ಅಥವಾ ಓಡಿಹೋಗುವುದಕ್ಕಿಂತ ಕತ್ತಿಯನ್ನು ತೆಗೆದುಕೊಳ್ಳುವುದು ಉತ್ತಮವೆಂದು ನಾವು ಹೇಳುತ್ತೇವೆ. ನಾವು ಸುರಕ್ಷಿತರಾಗಿದ್ದೇವೆ ಎಂದು ನಾವು ನಿರಾತಂಕವಾಗಿ ಬದುಕಲು ಸಾಧ್ಯವಿಲ್ಲ. ಮಾನವನ ಪ್ರಕೃತಿ ಹಾಗಿದೆ. ನಾವು ಅಪಾಯಗಳನ್ನು ಬರಮಾಡಿಕೊಳ್ಳಲು ಸಾಧ್ಯವಿಲ್ಲ ಮತ್ತು ನಮ್ಮ ಪರಿಶ್ರಮದಿಂದ-ಗೆದ್ದ ಸ್ವಾತಂತ್ರ್ಯವನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲಾ ಆಧುನಿಕ ರಕ್ಷಣಾ ವಿಧಾನಗಳು ಮತ್ತು ಸುಸಜ್ಜಿತ ಸೈನ್ಯ, ನೌಕಾಪಡೆ ಮತ್ತು ವಾಯುಪಡೆಯೊಂದಿಗೆ ನಾವು ಸದಾ ಸನ್ನದ್ಧರಾಗಿರಬೇಕು". ನೆಹರೂ ಪರಮಾಣು ಶಸ್ತ್ರಾಸ್ತ್ರಗಳ ಅಭಿವೃದ್ಧಿಯನ್ನು ರೂಪಿಸಿದರು ಮತ್ತು 1948 ರಲ್ಲಿ ಭಾರತದ ಪರಮಾಣು ಶಕ್ತಿ ಆಯೋಗವನ್ನು ಸ್ಥಾಪಿಸಿದರು. ನೆಹರು ಅವರು ಪರಮಾಣು ಭೌತವಿಜ್ಞಾನಿಯಾದ ಡಾ. ಹೋಮಿ ಜೆ. ಭಾಭಾ ಅವರನ್ನು ಕರೆದು, ಅವರಿಗೆ ಎಲ್ಲಾ ಪರಮಾಣು-ಸಂಬಂಧಿತ ವ್ಯವಹಾರಗಳು ಮತ್ತು ಕಾರ್ಯಕ್ರಮಗಳ ಮೇಲೆ ಸಂಪೂರ್ಣ ಅಧಿಕಾರವನ್ನು ವಹಿಸಿದರು ಮತ್ತು ಅವರು ನೆಹರೂಗೆ ಮಾತ್ರ ಉತ್ತರ ನೀಡಲು ಬಾಧ್ಯರು ಎಂಬ ಅಧಿಕಾರ ನೀಡಿದರು. ಭಾರತದ ಪರಮಾಣು ನೀತಿಯನ್ನು ನೆಹರು ಮತ್ತು ಭಾಭಾ ನಡುವಿನ “ಅಲಿಖಿತ ವೈಯಕ್ತಿಕ ನಂಬುಗೆಯಿಂದ” ಸ್ಥಾಪಿಸಲಾಯಿತು. ನೆಹರು ಪ್ರಸಿದ್ಧರಾದ ಭಾಭಾಗೆ "ಪ್ರೊಫೆಸರ್ ಭಾಭಾ, ಭೌತವಿಜ್ಞಾನವನ್ನು ನೀವು ನೋಡಿಕೊಳ್ಳಿ, ಅಂತರಾಷ್ಟ್ರೀಯ ಸಂಬಂಧ ವಿಚಾರವನ್ನು ನನಗೆ ಬಿಡಿ" ಎಂದು ಹೇಳಿದರು. 1948 ರ ಆರಂಭದಿಂದಲೂ, ಕೈಗಾರಿಕೀಕರಣಗೊಂಡ ಮುಂದುವರಿದ ರಾಷ್ಟ್ರಗಳ ವಿರುದ್ಧ ನಿಲ್ಲಲು- ಈ ಯೋಜನೆಯನ್ನು ಅಭಿವೃದ್ಧಿಪಡಿಸಲು ನೆಹರೂ ಹೆಚ್ಚಿನ ಮಹತ್ವಾಕಾಂಕ್ಷೆಯನ್ನು ಹೊಂದಿದ್ದರು. ಅಲ್ಲದೆ ಇತರ ದಕ್ಷಿಣ ಏಷ್ಯಾದ ರಾಷ್ಟ್ರಗಳಿಗೆ, ವಿಶೇಷವಾಗಿ ಪಾಕಿಸ್ತಾನಕ್ಕೆ ಭಾರತದ ಪ್ರಾದೇಶಿಕ ಶಕ್ತಿಯ ಶ್ರೇಷ್ಠತೆಯ ಭಾಗವಾಗಿ ಪರಮಾಣು ಶಸ್ತ್ರಾಸ್ತ್ರಗಳ ಸಾಮರ್ಥ್ಯವನ್ನು ಹೊಂದಲು ನಿರ್ಧರಿಸಿದ್ದರು. ನೆಹರು ಸಹ ಭಾಭಾಗೆ ತಿಳಿಸಿದ್ದನ್ನು, ನಂತರ ಅದನ್ನು "ರಾಜಾ ರಾಮಣ್ಣನಿಗೆ ಭಾಭಾ ಅವರು ಹೇಳಿದರು; (ನೆಹರು ಮಾತು) " ನಾವು ಸಾಮರ್ಥ್ಯವನ್ನು ಹೊಂದಿರಬೇಕು, ಮೊದಲು ನಾವು ಶಕ್ತರೆಂದು ಸಾಬೀತು ಮಾಡಬೇಕು ಮತ್ತು ನಂತರ ಗಾಂಧಿ, ಅಹಿಂಸೆ ಮತ್ತು ಪರಮಾಣು ಶಸ್ತ್ರಾಸ್ತ್ರಗಳಿಲ್ಲದ ಜಗತ್ತಿನ ವಿಷಯ ಮಾತನಾಡಬೇಕು "ಎಂದು ಹೇಳಿದರು. ಜಾಗತಿಕ ಉದ್ವಿಗ್ನತೆ ಮತ್ತು ಕೊರಿಯನ್ ಯುದ್ಧದ ಬಳಿಕ ಪರಮಾಣು ಶಸ್ತ್ರಾಸ್ತ್ರಗಳ ಬೆದರಿಕೆಯನ್ನು (1950-1953) ತಗ್ಗಿಸಲು ಕೆಲಸ ಮಾಡುತ್ತಿರುವುದಕ್ಕಾಗಿ ನೆಹರು ಅವರನ್ನು ಹಲವರು ಪ್ರಶಂಸಿಸಿದರು. ಅವರು ಮಾನವನ ಆರೋಗ್ಯದ ಮೇಲೆ ಪರಮಾಣು ಸ್ಫೋಟಗಳ ಪರಿಣಾಮಗಳ ಬಗ್ಗೆ ಅಧ್ಯಯನವನ್ನು ಮೊಟ್ಟ ಮೊದಲು ನಿಯೋಜಿಸಿದರು ಮತ್ತು ಅವರು ಕರೆಯುವ "ಈ ಭಯಾನಕ ಸರ್ವನಾಶದ ಎಂಜಿನ್,ಗಳ" ನಿಷೇಧವನ್ನು ನಿಲ್ಲಿಸಲು ಅವಿರತ ಪ್ರಚಾರ ಮಾಡಿದರು. ಪರಮಾಣು ಶಸ್ತ್ರಾಸ್ತ್ರ ಸ್ಪರ್ಧೆಯ ಓಟವು, ತಮ್ಮದೇ ಆದ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಅದರ ವೆಚ್ಚದ ಭಾರ ಹೊರಲು ಅಸಾಧ್ಯವಾಗುವಷ್ಟು ಮಿತಿಮೀರಿದ ಮಿಲಿಟರೀಕರಣಕ್ಕೆ ಕಾರಣವಾಗಬಹುದೆಂದು ಆತಂಕಗೊಂಡಿದ್ದರು. ಅದರಿಂದ ಪರಮಾಣು ನಿಶಸ್ತ್ರೀ ಕರಣವನ್ನು ಉತ್ತೇಜಿಸಲು ಅವರು ವಾಸ್ತವಿಕ ಕಾರಣಗಳನ್ನು ಹೊಂದಿದ್ದರು. ಕಾಶ್ಮೀರದ ರಕ್ಷಣೆ ಲಾರ್ಡ್ ಮೌಂಟ್ಬ್ಯಾಟನ್ ಅವರು ವಿಶ್ವಸಂಸ್ಥೆ (ಯುಎನ್) ಆಶ್ರಯದಲ್ಲಿ ಕಾಶ್ಮೀರದಲ್ಲಿ ಜನಮತಸಂಗ್ರಹವನ್ನು ನಡೆಸಲು 1948 ರಲ್ಲಿ ನೆಹರು ಭರವಸೆ ನೀಡಿದರು ಎಂದು ಹೇಳಿ ಕಾಶ್ಮೀರವು ಭಾರತ ಮತ್ತು ಪಾಕಿಸ್ತಾನದ ನಡುವೆ ವಿವಾದಿತ ಪ್ರದೇಶವಾಗಿದೆ ಎಂದರು., ಎರಡೂ ದೇಶಗಳೂ 1947 ರಲ್ಲಿ ಈ ರಾಜ್ಯಕ್ಕಾಗಿ ಯುದ್ಧಕ್ಕೆ ಹೋಗಿದ್ದವು. ಆದಾಗ್ಯೂ, ಯು.ಎನ್. ನಿರ್ಣಯಕ್ಕೆ ಅನುಗುಣವಾಗಿ ಪಾಕಿಸ್ತಾನವು ಆಕ್ರಮಣದಿಂದ ಪಡೆದುಕೊಂಡ ಪ್ರದೇಶವನ್ನು ತೆರವು ಗೊಳಿಸಲು ವಿಫಲವಾದ ಕಾರಣ, ಮತ್ತು ನೆಹರು ಅವರಿಗೆ ಯುಎನ್ ನಿಲುವಿನ ಬಗ್ಗೆ ಅಸಂತುಷ್ಟತೆ ಬೆಳೆಯುತ್ತಿದ್ದಂತೆ ಅವರು 1953 ರಲ್ಲಿ ಜನಾಭಿಪ್ರಾಯ ಸಂಗ್ರಹಣೆಯನ್ನು ನಡೆಸಲು ನಿರಾಕರಿಸಿದರು. ಕಾಶ್ಮೀರ ಮತ್ತು ಅವರ ರಾಜ್ಯವನ್ನು ಭಾರತದೊಳಗೆ ಏಕೀಕರಿಸುವ ಅವರ ನೀತಿಗಳನ್ನು ವಿಶ್ವಸಂಸ್ಥೆ ನ ಮುಂದೆ ಅವರ ಸಹಾಯಕರಾದ ವಿ.ಕೆ. ಕೃಷ್ಣ ಮೆನನ್ ಅವರ ಭಾವೋದ್ರಿಕ್ತ ಭಾಷಣಗಳಿಂದಾಗಿ ಭಾರತದಲ್ಲಿ ಖ್ಯಾತಿಯನ್ನು ಗಳಿಸಿದರು. ಭಾತರದ ಕಾಸ್ಮಿರ ನೀತಿಯನ್ನು ಆಗಾಗ್ಗೆ ಸಮರ್ಥಿಸಿಕೊಂಡರು. 1953 ರಲ್ಲಿ ಕಾಸ್ಮೀರ ಭಾರತದ ಒಕ್ಕೂಟದಲ್ಲಿ ಸೇರಲು ಬೆಂಬಲಸಿದ ಕಾಶ್ಮೀರಿ ರಾಜಕಾರಣಿ ಶೇಖ್ ಅಬ್ದುಲ್ಲಾರನ್ನು ಬಂಧಿಸಿದರು. ಅವರು ಹಿಂದೆ ಬೆಂಬಲಿಸಿದ್ದರು; ಆದರೆ ಈಗ ಪ್ರತ್ಯೇಕತಾವಾದಿ ಮಹತ್ವಾಕಾಂಕ್ಷೆಗಳನ್ನು ಆಶ್ರಯಿಸಿರುವುದಾಗಿ ಶಂಕಿಸಿದ್ದಾಗಿ ನೆಹರೂ ಬಂಧನದ ಆದೇಶ ನೀಡಿದರು. ನೆಹರು ನಂತರ ಬಕ್ಷಿ ಗುಲಾಮ್ ಮೊಹಮ್ಮದ್ ಅವರನ್ನು ಅಬ್ದುಲ್ಲಾರ ಬದಲಿಗೆ ಬದಲಿಸಿ ಕಾಸ್ಮಿರದ ಅಧಿಕಾರ ವಹಿಸಿಕೊಳ್ಳುವಂತೆ ಮಾಡಿದರು. 1957 ರಲ್ಲಿ ಭಾರತ ಹೊಂದಿದ ಕಾಶ್ಮೀರದ ನಿಲುವನ್ನು ಸಮರ್ಥಿಸುವ ಎಂಟು ಗಂಟೆಗಳ ಭಾಷಣವನ್ನು ನೀಡಲು ಮೆನನ್’ಗೆ ಸೂಚನೆ ನೀಡಲಾಯಿತು; ಇಲ್ಲಿಯವರೆಗೆ, ಆ ಭಾಷಣವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಯಾರೂ ಎಂದಿಗೂ ಮಾಡದಿರುವಷ್ಟು ಉದ್ದವಾಗಿದೆ, ಇದು ಜನವರಿ 23 ರಂದು ನೆಡೆದ ಐದು ಗಂಟೆಗಳ 762 ನೆಯ ಸಭೆ ಮತ್ತು 24 ನೇ ದಿನಾಂಕ ಮುಂದುವರಿದ ಎರಡು ಗಂಟೆಗಳ ಮತ್ತು ನಲವತ್ತೆಂಟು ನಿಮಿಷಗಳನ್ನು ಒಳಗೊಂಡ ಭಾಷಣವಾಗಿರುತ್ತದೆ, ಈ ಭಾಷನದ ಅಂತ್ಯದಲ್ಲಿ ಭದ್ರತಾ ಕೌನ್ಸಿಲ್ ಸಭೆಯ ನೆಲದ ಮೇಲೆ ಮೆನನ್’ರ ಕುಸಿತದೊಂದಿಗೆ ಮುಕ್ತಾಯವಾಗುತ್ತದೆ . ಈ ದೀರ್ಘ ಕಾಲದ ಭಾಷಣದ(ಫಿಲಿಬಸ್ಟರ್) ಸಮಯದಲ್ಲಿ, . (ದೊಡ್ಡ ಅಶಾಂತಿ ಅಡಿಯಲ್ಲಿ). ನೆಹರು ಕಾಶ್ಮೀರದಲ್ಲಿ ಭಾರತೀಯ ಸೈನ್ಯ ಶಕ್ತಿಯನ್ನು ಮತ್ತು ಜನಬೆಂಬಲವನ್ನು ವೇಗವಾಗಿ ಕ್ರೋಢೀಕರಿಸಲು ಯಶಸ್ವಿಯಾದರು. ಮೆನನ್ ಕಾಶ್ಮೀರದ ಮೇಲೆ ಭಾರತೀಯ ಸಾರ್ವಭೌಮತ್ವವನ್ನು ತೀವ್ರವಾಗಿ ಸಮರ್ಥಿಸಿಕೊಂಡರು, ಭಾರತದಲ್ಲಿ ತಮ್ಮ ಬೆಂಬಲವನ್ನು ವಿಸ್ತರಿಸಿಕೊಂಡರು. ಭಾರತೀಯ ಪತ್ರಿಕೆಗಳು ಅವರನ್ನು ಸಧ್ಯದ "ಕಾಶ್ಮೀರದ ಹೀರೋ" ಎಂದು ಕರೆದವು. ನಂತರ ಭಾರತದಲ್ಲಿ ನೆಹರೂ ಅವರ ಜನಪ್ರಿಯತೆ ಉತ್ತುಂಗಕ್ಕೇರಿತು; ದೂರದ-ಬಲಪಂಥದಿಂದ ಮಾತ್ರ (ಸಣ್ಣ) ಟೀಕೆಗಳು ಬಂದವು. ಚೀನಾ ನೀತಿ 1954 ರಲ್ಲಿ ನೆಹರೂ ನೆರೆ ರಾಷ್ಟ್ರ ಚೀನಾದೊಂದಿಗೆ ಶಾಂತಿಯುತ ಸಹಬಾಳ್ವೆಯ ಐದು ತತ್ವಗಳನ್ನ ಒಪ್ಪಿ ಸಹಿ ಹಾಕಿದರು, ಇದು ಭಾರತದಲ್ಲಿ ಪಂಚ ಶೀಲ (ಸಂಸ್ಕೃತ ಪದಗಳು, ಪಂಚ: ಐದು, ಶೀಲ: ಸದ್ಗುಣಗಳ ನೀತಿ), ಎರಡು ದೇಶಗಳ ನಡುವಿನ ಸಂಬಂಧಗಳನ್ನು ನಿಯಂತ್ರಿಸುವ ತತ್ವಗಳ ಒಂದು ಗುಂಪು ಎಂದು ಗುರುತಿಸಲ್ಪಟ್ಟಿತು ಅವರ ಮೊದಲ. ಒಪ್ಪಂದದ ರೂಪದ ಔಪಚಾರಿಕ ಸಂಕೇತೀಕರಣವು 1954 ರಲ್ಲಿ ಚೀನಾ ಮತ್ತು ಭಾರತ ನಡುವಿನ ಒಂದು ಒಪ್ಪಂದದಲ್ಲಿತ್ತು. ಚೀನಾ ಮತ್ತು ಭಾರತದ ಟಿಬೆಟ್ ಪ್ರದೇಶದ ನಡುವೆ ವ್ಯಾಪಾರ ಮತ್ತು ಪರಸ್ಪರ ನೆಡವಳಿಕೆಯ ಮೇಲೆ "ಒಪ್ಪಂದವನ್ನು (ಟಿಪ್ಪಣಿಗಳ ವಿನಿಮಯದೊಂದಿಗೆ) ಪೂರ್ವಭಾವಿಯಾಗಿ ಅವರು ಬೆಳೆಸಿದರು, 29 ಏಪ್ರಿಲ್ 1954 ರಂದು ಪೀಕಿಂಗ್ ನಲ್ಲಿ. ಡಿಸೆಂಬರ್ 1953 ರಿಂದ ಏಪ್ರಿಲ್ 1954 ರವರೆಗೆ ಪಿಆರ್ಸಿ (ಚೀನಾ) ಸರ್ಕಾರದ ನಿಯೋಗ ಅಕ್ಸಾಯ್ ಚಿನ್ ಮತ್ತು ದಕ್ಷಿಣದ ವಿವಾದಿತ ಪ್ರದೇಶಗಳಿಗೆ ಸಂಬಂಧಿಸಿ ಎರಡು ರಾಷ್ಟ್ರಗಳ ನಡುವಿನ ಸಂಬಂಧಗಳ ಮೇಲೆ, ಭಾರತೀಯ ಸರ್ಕಾರದ ನಿಯೋಗದ ನಡುವೆ ಮಾತುಕತೆಗಳು ನಡೆದವು. ಟಿಬೆಟ್. 1957 ರ ಹೊತ್ತಿಗೆ, ಚೀನೀ ಪ್ರಧಾನಿ ಝೌ ಎನ್ ಲೈ ಟಿಬೆಟ್‍ನಲ್ಲಿ ಚೀನೀಯರು ಅದರ ರಕ್ಷಣೆಯ ಸ್ಥಾನವನ್ನು ಹೊಂದಿದ್ದು ಅದರ ಪೂರ್ಣ ಹೊಣೆ ಸ್ವೀಕರಿಸಲು ನೆಹರು ಅವರಿಗೆ ಮನವೊಲಿಸುವಲ್ಲಿ ಯಶಸ್ವಿಯಾದರು, ಇದರಿಂದಾಗಿ ಟಿಬೆಟ್ ಸಂಭವನೀಯ ಮಿತ್ರರಾಷ್ಟ್ರವಾಗುವ ಸಾಧ್ಯತೆಯನ್ನು ಕಳೆದುಕೊಂಡಿತು. ಆಗ ಭಾರತವೂ ಅದಕ್ಕೆ ಮಿಲಿಟರಿ ಸಹಾಯ ಒದಗಿಸುವ ಸ್ಥಿತಿಯಲ್ಲಿ ಇರಲಿಲ್ಲ. ಈ ಒಪ್ಪಂದವು 1960 ರ ದಶಕದಲ್ಲಿ ಕಡೆಗಣಿಸಲ್ಪಟ್ಟಿತು, ಆದರೆ 1970 ರ ದಶಕದಲ್ಲಿ, ಚೀನಾ-ಭಾರತ ಸಂಬಂಧಗಳಲ್ಲಿ ಫೈವ್ ಪ್ರಿನ್ಸಿಪಲ್ಸ್ ಮತ್ತೊಮ್ಮೆ ಪ್ರಮುಖವಾಗಿ ಕಂಡಿತು, ಮತ್ತು ರಾಷ್ಟ್ರಗಳ ನಡುವಿನ ಸಂಬಂಧಗಳು ಹೆಚ್ಚು ಸಾಮಾನ್ಯವಾಗಿತ್ತು. ಇಂದಿರಾ ಗಾಂಧಿಯವರ ಪ್ರಧಾನಮಂತ್ರಿ ಮತ್ತು ಜನತಾ ಪಕ್ಷದ 3 ವರ್ಷಗಳ ಆಡಳಿತ (1977-1980) ಅವಧಿಯಲ್ಲಿ ಈ ಪ್ರದೇಶದುದ್ದಕ್ಕೂ ವ್ಯಾಪಕವಾಗಿ ಐದು ನೀತಿಗಳು ಅನುಸರಿಸಲ್ಪಟ್ಟವು ಮತ್ತು ಸ್ವೀಕರಿಸಲ್ಪಟ್ಟವು. ಶಾಂತಿಯುತ ಸಹಬಾಳ್ತೆಯ ಐದು ತತ್ವಗಳು 1954 ರ ಚೀನಾ -ಭಾರತದ ಗಡಿ ಒಪ್ಪಂದದ ಆಧಾರವಾಗಿತ್ತು, ಆದರೆ ನಂತರದ ವರ್ಷಗಳಲ್ಲಿ ನೆಹರುರ ಸಹಬಾಳ್ವೆಯ ಒಪ್ಪಂದವನ್ನು ಕಡೆಗಣಿಸಿ ಚೀನಾವು ಗಡಿ ವಿವಾದಗಳ ವಿಚಾರವಾಗಿ ಚೀನಾದ ಒತ್ತಡವನ್ನು ಹೆಚ್ಚಿಸಿತು. ನಂತರ ಚೀನಾದ ಟಿಬೆಟ್ಟಿನ ಮೇಲೆ ಪೂರ್ಣ ಆಕ್ರಮಣ ಮಾಡಿ ಅದನ್ನು ತನ್ನವಶ ಪಡಿಸಿಕೊಂಡಾಗ, 14 ನೆಯ ದಲೈಲಾಮಾ ಭಾರತಕ್ಕೆ ಸಂಗಡಿಗರೊಂದಿಗೆ ಆಶ್ರಯ ಕೋರಿ ಭಾರತಕ್ಕೆ ಗುಳೆ ಬಂದರು. ಅವರಿಗೆ ನೆಹರು ಆಶ್ರಯ ನೀಡುವ ನಿರ್ಧಾರವನ್ನು ತೆಗೆದುಕೊಂಡರು. ಚೀನಾದ ಸಮಾಜವಾದಿ ಕ್ರಾಂತಿಯ ನಂತರ ಕಮ್ಯುನಿಸ್ಟ್ ಪಕ್ಷ ಮಾವೋ ನಾಯಕತ್ವದಲ್ಲಿ ಪೂರ್ಣ ಚೀನಾವನ್ನು ಆಕ್ರಮಿಸಿಕೊಂಡಿತು. ಆದರೆ ರಿಪಬ್ಲಿಕ್ ಚೈನಾ ತೈಫೆಯ ಚಿಕ್ಕ ದ್ವೀಪದಲ್ಲಿ ನೆಪಮಾತ್ರಾ ಅಸ್ತಿತ್ವದಲ್ಲಿತ್ತು. ರಿಪಬ್ಲಿಕ್ ಆಫ್ ಚೀನಾ (ROC) 1945 ರಲ್ಲಿ ವಿಶ್ವಸಂಸ್ಥೆ ಸ್ಥಾಪನೆಯಾದ ನಂತರ ವಿಶ್ವಸಂಸ್ಥೆಗೆ ಸೇರಿತ್ತು. ಅದು ಅಮೆರಿಕ ಸಂ.ಸಂಸ್ಥಾನದ ಬೆಂಬಲದಲ್ಲಿ ವಿಶ್ವಸಂಸ್ಥೆಯ ಭದ್ರತಾ ಸಮಿತಯ ಸದಸ್ಯ ರಾಷ್ಟ್ರವಾಗಿದ್ದು ವಿಟೋ ಅಧಿಕಾರ ಹೊಂದಿತ್ತು. ಕಮ್ಯುನಿಸ್ಟ್ ಚೀನಾ ನೆಹರೂ ಅವರ ಪಂಚ ಶೀಲ ತತ್ವವನ್ನು ಒಪ್ಪಿ ಭಾರತದ ಮಿತ್ರರಾಷ್ಟ್ರವಾದ ನಂತರ ನೆಹರೂ ಅವರು ಚಿಕ್ಕ ದ್ವೀಪದಲ್ಲಿ ಮಾತ್ರಾ ಅಸ್ತಿತ್ವದಲ್ಲಿರುವ ಗಣರಾಜ್ಯ ಚೀನಾದ ಬದಲಿಗೆ ಪೂರ್ಣ ಚೀನಾ ಭೂಭಾಗದ ಒಡೆತನ ಹೊಂದಿದ ಕಮ್ಯೂನಿಸ್ಟ್ ಚೀನಾಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಸದಸ್ಯತ್ವವನ್ನು ಕೊಡಬೇಕೆಂದು ಹೇಳಿದರು. ಆದರೆ ರಷ್ಯಾದ ಒತ್ತಡದ ನಂತರವೇ ಅಮೇರಿಕಾ ಮತ್ತು ಇತರ ಸದಸ್ಯರಾಷ್ಟ್ರಗಳು ಕಮ್ಯುನಿಸ್ಟ್ ಚೀನಾಕ್ಕೆ ವಿಟೋ ಮಾಡುವ ಅವಕಾಶ ಹೊಂದಿದ ಭದ್ರತಾ ಸಮಿತಿಯ ಸದಸ್ಯತ್ವದ ಸ್ಥಾನವನ್ನು ಕೊಟ್ಟವು.ಅದಕ್ಕೆ ಇತರೆ ಭದ್ರತಾಸಮಿತಿ ಸದಸ್ಯರು ಮನ್ನಣೆ ಕೊಡಲಿಲ್ಲ. ರಷ್ಯಾ, ಯುನೈಟೆಡ್ ಕಿಂಗ್ಡಮ್, ಫ್ರಾನ್ಸ್ ಮತ್ತು ಇತರ ಅಮೇರಿಕನ್ ಮೈತ್ರಿಕೂಟಗಳು ರಿಪಬ್ಲಿಕ್ ಆಫ್ ಚೀನಾ (ROC)ದಿಂದ ಕಮ್ಯೂನಿಸ್ಟ್‍ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವನ್ನು (PRC) ಬೆಂಬಲಿಸಿದವು. 25 ಅಕ್ಟೋಬರ್ 1971 ರಂದು, ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾವನ್ನು ಏಕೈಕ ಕಾನೂನಿನ್ವಯ ಚೀನಾ ಎಂದು ಗುರುತಿಸಲು ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ ೩ನೇ ೨ ಬಹುಮತದಿಂದ ಒಪ್ಪಲಾಯಿತು. ಭದ್ರತಾ ಸಮಿತಿಯ ಸದಸ್ಯತ್ವ ಮತ್ತು ಭಾರತ ರಿಪಬ್ಲಿಕ್ ಚೀನಾವಿಶ್ವ ಸಂಸ್ತೆಯ ಭದ್ರತಾಮಿತಿಯ ವಿಟೋ ಪಡೆದ ರಾಷ್ಟ್ರವಾಗಿತ್ತು. ಅದರೆ ಅದು ಕಮ್ಯೂನಿಸ್ಟ್ ಚೀನಾಕ್ಕೆ ಸಂಪೂರ್ಣ ಭೂಭಾಗವನ್ನು ಸೋತು ಒಂದು ಸಣ್ಣ ದ್ವೀಪದಲ್ಲಿ ಯು.ಎಸ್.ಎ.ಯ (ಅಮೇರಿಕದ)ಬೆಂಬಲದೊಂದಿಗೆ ಅಸ್ಥಿತ್ವ ಹೊಂದಿತ್ತು. ಚೀನಾವನ್ನು ಅದರ ವಿಶ್ವಸಂಸ್ತೆಯ ಭದ್ರತಾ ಸಮಿತಿಯ ಖಾಯಂ ಸ್ಥಾನದಿಂದ ತಪ್ಪಿಸಿ ಅಮೇರಿಕಾ ಸಲಹೆಯಂತೆ ಭಾರತವು ಅದನ್ನು ಪಡೆಯಲು ಪ್ರಯತ್ನಿಸಿದರೆ ಚೀನಾದ ಸತತ ವಿರೋಧವನ್ನು ಕಟ್ಟಿ ಕೊಳ್ಳಬೇಕಾಗಿತ್ತು. ಮತ್ತು ಭದ್ರತಾ ಸಮಿತಿಯ ಎಲ್ಲಾ ಸದಸ್ಯರಾಷ್ಟ್ರಗಳು ಒಪ್ಪಬೇಕಾಗಿತ್ತು; ರಷ್ಯಾವು ಅದನ್ನು ತನ್ನ ವಿಟೋ ಮೂಲಕ ತಡೆಯುವ ಸಾಧ್ಯತೆ ಇತ್ತು. ಅದಲ್ಲದೆ ವಿಶ್ವಸಂಸ್ತೆಯ ಜನರಲ್ ಅಸೆಂಬ್ಲಿಯಲ್ಲಿ ಒಟ್ಟು ಸದಸ್ಯರ ಮೂರನೇ ಎರಡು ಬಹುಮತವನ್ನು ಭಾರತ ಪಡೆಯಬೇಕಿತ್ತು. ಅದು ರಷ್ಯಾ ಚೀನಾ ಬಣಗಳು ಒಪ್ಪದೆ ಅಸಾದ್ಯವಾಗಿತ್ತು, ಕಾರಣ ರಷ್ಯಾ, ಚೀನಾ ಮತ್ತು ಅದರ ಪರ ರಾಷ್ಟ್ರಗಳು ಬೆಂಬಲಿಸುತ್ತಿರಲಿಲ್ಲ. ಹಾಗಾಗಿ ನೆಹರೂ ಅಮೇರಿಕದ ಕಿಸಿಂಜರ್ ಸಲಹೆಯನ್ನು ಕಾರ್ಯಸಾದ್ಯವಲ್ಲ ಮತ್ತು ಭಾರತವನ್ನು ರಷ್ಯಾ ಮತ್ತು ಚೀನಾದಿಂದ ದೂರ ಇಡುವ ಅಮೆರಿಕಾ ತಂತ್ರ ಎಂದು ತಳ್ಳಿಹಾಕಿದರು. ಅಮೇರಿಕ ಸಂಯುಕ್ತ ಸಂಸ್ಥಾನ (ಯುನೈಟೆಡ್ ಸ್ಟೇಟ್ಸ್) 1956 ರಲ್ಲಿ, ಬ್ರಿಟಿಷ್, ಫ್ರೆಂಚ್ ಮತ್ತು ಇಸ್ರೇಲಿಗಳು ಸೂಯೆಜ್ ಕಾಲುವೆಯ ಜಂಟಿ ಆಕ್ರಮಣ ನೆಡೆಸಿರುವುದನ್ನು ನೆಹರು ಟೀಕಿಸಿದರು. ಭಾರತದ ಪ್ರಧಾನಿಯಾಗಿ ಮತ್ತು ಅಲಿಪ್ತ ಚಳವಳಿಯ ನಾಯಕನಾಗಿ ನೆಹರೂ ಪಾತ್ರವು ಮಹತ್ವದ್ದಾಗಿತ್ತು; ಈಡನ್ ಮತ್ತು ಈ ಆಕ್ರಮಣದ ಸಹ-ಪ್ರಾಯೋಜಕರನ್ನು ತೀವ್ರವಾಗಿ ಖಂಡಿಸಿದ ಸಂದರ್ಭದಲ್ಲಿ, ಅವರು ಎರಡು ಕಡೆಗಳ ನಡುವೆ ಸಹ-ಸಮಾನ ದೂರವನ್ನು ಇಟ್ಟುಕೊಳ್ಳಲು ಪ್ರಯತ್ನಿಸಿದರು. ಯು.ಎಸ್. ಅಧ್ಯಕ್ಷ ಡ್ವೈಟ್ ಐಸೆನ್ಹೋವರ್’ಜೊತೆ ನೆಹರು ಪ್ರಬಲ ಮಿತ್ರತ್ವ ಹೊಂದಿದ್ದರು. ಅವರು ಸಾರ್ವಜನಿಕವಾಗಿ ಮೌನವಾಗಿರುವಾಗ, ಬ್ರಿಟನ್ ಮತ್ತು ಫ್ರಾನ್ಸ್ಗಳನ್ನು ಹಿಂದೆಗೆದುಕೊಳ್ಳುವಂತೆ ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಅಮೆರಿಕದ ಪ್ರಭಾವವನ್ನು ಬಳಸಿಕೊಳ್ಳುವ ಮಟ್ಟಿಗೆ ಹೋದರು. ಈ ಘಟನೆಯು ನೆಹರು ಮತ್ತು ಭಾರತವನ್ನು ಮೂರನೆಯ-ವಿಶ್ವಬಣದಲ್ಲಿ ಪ್ರಭಾವಿ ರಾಷ್ಟ್ರವಾಗಿ ಪ್ರತಿಷ್ಠಾಪಿಸಿತು ಸೂಯೆಜ್ ಬಿಕ್ಕಟ್ಟಿನ ಸಂದರ್ಭದಲ್ಲಿ, ನೆಹರುರ ಬಲಗೈ ಮನುಷ್ಯ ಮೆನನ್, ಪಶ್ಚಿಮದೊಂದಿಗೆ ರಾಜಿ ಮಾಡಿಕೊಳ್ಳಲು ಉದಾಸೀನನಾಗಿದ್ದ ಗಮಲ್ ನಾಸರ್ ಅವರನ್ನು ಮನವೊಲಿಸಲು ಪ್ರಯತ್ನಿಸಿದರು, ಪಾಶ್ಚಾತ್ಯ ಶಕ್ತಿಗಳು ನಾಸರ್ ಗೆ ರಾಜಿ ಮಾಡಲು ಸಿದ್ಧರಿದ್ದಾರೆ ಎಂಬ ಅರಿವು ಮೂಡಿಸಿತು. ಸೂಯೆಜ್ ಬಿಕ್ಕಟ್ಟಿನ ಸಂದರ್ಭದಲ್ಲಿ ನಾಸರ್ ಪರವಾಗಿ ನೆಹರು ತಮ್ಮ ಹಸ್ತಕ್ಷೇಪದ ನಂತರ ನೆಹರು ಅವರನ್ನು ಸಮಾಧಾನ ಪಡಿಸಲು ಯುಎಸ್ ನ ಐಸೆನ್ಹೋವರ್ ಆಶಿಸಿದ್ದರು. ಆದಾಗ್ಯೂ, ಶೀತಲ ಸಮರ, ಸಂಶಯಗಳು ಮತ್ತು ಸಮಾಜವಾದದ ನೆಹರು ಅವರ ಬಗ್ಗೆ ಅಮೆರಿಕ ಅಪನಂಬಿಕೆ, ಇದ್ದರೂ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಶಾಂತಗೊಳಿಸಿತು, ಇದು ಸೋವಿಯೆತ್ ಒಕ್ಕೂಟವನ್ನು ಧೈರ್ಯವಾಗಿ ಬೆಂಬಲಿಸುವ ನೆಹರೂ ಅವರನ್ನು ಶಂಕಿಸಿತು. ಸೂಯೆಜ್ ಬಿಕ್ಕಟ್ಟಿನ ನಂತರವೂ ನೆಹರೂ ಬ್ರಿಟನ್ನೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು. ಪರ್ಶಚಮ ನದಿಗಳು ಮತ್ತು ಸಿಂಧೂ ನದಿಗಳ ಬಗೆಗೆ ನೆಹರು ಅವರು ಯುಕೆ ಮತ್ತು ವಿಶ್ವ ಬ್ಯಾಂಕ್’ನ ಮಧ್ಯಸ್ಥಿಕೆ ಯನ್ನು ಒಪ್ಪಿಕೊಂಡರು, ಪಂಜಾಬ್ ಪ್ರಾಂತ್ಯದ ಪ್ರಮುಖ ನದಿಗಳ ಸಂಪನ್ಮೂಲಗಳನ್ನು ಹಂಚಿಕೊಳ್ಳುವ ಬಗ್ಗೆ ದೀರ್ಘಾವಧಿಯ ವಿವಾದಗಳನ್ನು ಪರಿಹರಿಸಲು 1960 ರಲ್ಲಿ ಸಿಂಧೂ ವಾಟರ್ಸ್ ಒಡಂಬಡಿಕೆಗೆ ಪಾಕಿಸ್ತಾನಿ ಆಡಳಿತಗಾರ ಅಯುಬ್ ಖಾನ್ ರೊಂದಿಗೆ ಸಹಿ ಹಾಕಿದರು. ಗೋವಾ ಬಿಕ್ಕಟ್ಟು ಗೋವಾವನ್ನು ಭಾರತ ಒಕ್ಕೂಟಕ್ಕೆ ಸೇರುವ ಬಗೆಗೆ ಹಲವು ವರ್ಷಗಳ ಮಾತುಕತೆಗಳು ವಿಫಲವಾದ ನಂತರ, 1961 ರಲ್ಲಿ ಪೋರ್ಚುಗೀಸ್ ನಿಯಂತ್ರಣದ ಗೋವಾದ ಮೇಲೆ ಆಕ್ರಮಣ ಮಾಡಲು ನೆಹರು ಭಾರತೀಯ ಸೈನ್ಯಕ್ಕೆ ಅಧಿಕಾರ ನೀಡಿದರು. ನಂತರ ಅವರು ಅದನ್ನು ಔಪಚಾರಿಕವಾಗಿ ಭಾರತಕ್ಕೆ ಸೇರಿಸಿಕೊಂಡರು. ಇದು ಭಾರತದಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು, ಆದರೆ ಮಿಲಿಟರಿ ಬಲವನ್ನು ಬಳಸಿದ್ದಕ್ಕಾಗಿ ಭಾರತದಲ್ಲಿನ ಕಮ್ಯುನಿಸ್ಟ್‘ರು ವಿರೋಧಿಸಿ ಅವರನ್ನು ಟೀಕಿಸಿದರು. ಪೋರ್ಚುಗಲ್ ವಿರುದ್ಧ ಸೇನಾಪಡೆಯ ಬಳಕೆಯಿಂದ ಬಲಪಂಥೀಯ ಮತ್ತು –ಅತಿವಾದಿ-ಬಲ ಗುಂಪುಗಳ ಸೌಹಾರ್ದತೆಯನ್ನು ಗಳಿಸಿದರು. ವಿಶ್ವಸಂಸ್ಥೆಯ ಎರಡನೆಯ ಪ್ರಧಾನ ಕಾರ್ಯದರ್ಶಿ ಡಾಗ್ ಹ್ಯಾಮರಷೀಲ್ಡ್, ಅವರು ನೆಹರೂ ಮತ್ತು ಚೀನೀ ಪ್ರಧಾನಿ ಝೌ ಎನ್ ಲಯ್, ಅವರನ್ನು ಅಲೆಕ್ಸಾಂಡರ್ ಗ್ರಂಥಮ್ ಗೆ ಹೋಲಿಸಿ, ನೆಹರೂ ಒಂದು ನೈತಿಕ ದೃಷ್ಟಿಕೋನದಿಂದ ಅವರಿಗಿಂತ ಉತ್ತಮವಾಗಿದ್ದರೆ, ಝೌ ಎನ್ಲೈ ನೈಜ ರಾಜಕೀಯ ತಂತ್ರದಲ್ಲಿ ಹೆಚ್ಚು ಪರಿಣತರು ಎಂದು ಹೇಳಿದ್ದಾರೆ. 1962 ರ ಚೀನಾ ಭಾರತ ಯುದ್ಧ ಇದನ್ನೂ ನೋಡಿ:ಭಾರತ-ಚೀನ ಯುದ್ಧ 1959 ರಿಂದ ಆರಂಭವಾಗಿ 1961 ರಲ್ಲಿ ತೀವ್ರಗೊಂಡ ಒಂದು ಪ್ರಕ್ರಿಯೆಯಲ್ಲಿ, ಚೀನಾ - ಭಾರತ ಗಡಿ ಪ್ರದೇಶದ ವಿವಾದಿತ ಪ್ರದೇಶಗಳಲ್ಲಿ ಮಿಲಿಟರಿ ಹೊರಠಾಣೆಗಳನ್ನು ಸ್ಥಾಪಿಸುವ "ಮುಂಚೂಣಿ ನೀತಿಯನ್ನು" ನೆಹರು ಅಳವಡಿಸಿಕೊಂಡರು, ಅದರಲ್ಲಿ ಭಾರತವು ಹಿಂದೆ ನಿಯಂತ್ರಿಸದೆ ಇದ್ದ ಪ್ರದೇಶಗಳಲ್ಲಿ 43 ಹೊರಠಾಣೆಗಳನ್ನೂ ಹೊಸದಾಗಿ ಸ್ಥಾಪಿಸುವುದೂ ಸಹ ಒಳಗೊಂಡಿತ್ತು. [168] ಚೀನಾ ಈ ಕೆಲವುಹೊರಠಾಣೆಗಳ ಮೇಲೆ ದಾಳಿ ಮಾಡಿತು, ಹೀಗಾಗಿ ಭಾರತವು ಚೀನಾ - ಭಾರತ ಯುದ್ಧ ಆರಂಭವಾಯಿತು. ಅಂತಿಮವಾಗಿ ಭಾರತ ಹಿನ್ನಡೆ ಅನುಭವಿಸಿತು., ಆದರೂ ಚೀನಾದ ಪೂರ್ವ ವಲಯದಲ್ಲಿ ಯುದ್ಧ ಪೂರ್ವದಲ್ಲಿದ್ದ ವಲಯಕ್ಕೆ ಚೀನಾ ವಾಪಸಾಯಿತು. ಆದರೆ ಬ್ರಿಟಿಷ್ ಭಾರತದಲ್ಲಿಯೇ ಇದ್ದ ಅಕ್ಸಾಯ್ ಚಿನ್ ಅನ್ನು ಸ್ವಾಧೀನಪಡಿಸಿಕೊಂಡ ಚೀನಾ ನಂತರ ಭಾರತಕ್ಕೆ ಹಸ್ತಾಂತರಿಸಿತು. . ನಂತರ, 1948 ರಿಂದ ಪಾಕಿಸ್ತಾನವು ನಿಯಂತ್ರಿಸುತ್ತಿದ್ದ ಸಿಯಾಚಿನ್ ಬಳಿಯ ಕಾಶ್ಮೀರದ ಕೆಲವು ಭಾಗವನ್ನು ಚೀನಾಕ್ಕೆ ಪಾಕಿಸ್ತಾನವು ಹಸ್ತಾಂತರಿಸಿತು. ಈ ಯುದ್ಧವು ಭಾರತದ ಮಿಲಿಟರಿಯ ಸಿದ್ಧವಿಲ್ಲದಿರುವಿಕೆಯನ್ನು ಬಹಿರಂಗಪಡಿಸಿತು, ಭಾರತವು 14,000 ಸೈನಿಕರನ್ನು ಯುದ್ಧ ವಲಯಕ್ಕೆ ಕಳುಹಿಸಿತ್ತು, ಆದರೆ ಚೀನೀ ಸೈನ್ಯವು ಅದಕ್ಕೆ ವಿರೋಧವಾಗಿ ಹಲವು ಬಾರಿ ದೊಡ್ಡದಾಗಿತ್ತು. ನೆಹರು ಸರ್ಕಾರವನ್ನು ರಕ್ಷಣಾತ್ಮಕತೆಗೆ ಸಾಕಷ್ಟು ಗಮನವನ್ನು ನೀಡದೆ ಇರುವುದನ್ನು ಮಾದ್ಯಮಗಳು ವಿರೋಧ ಪಕ್ಷದವರು ವ್ಯಾಪಕವಾಗಿ ಟೀಕಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ, ರಕ್ಷಣಾ ಸಚಿವ ವಿ. ಕೆ. ಕೃಷ್ಣ ಮೆನನ್ ರನ್ನು ನೆಹರೂ ವಜಾಗೊಳಿಸಿದರು. ನೆಹರು ಅಮೆರಿಕದೊಂದಿಗೆ ಉತ್ತಮ ಸಂಬಂಧಗಳನ್ನು ಬೆಳಸಿದರು ಮತ್ತು ಯುದ್ಧಕ್ಕಾಗಿ ಅಮೆರಕದ ಸಹಾಯ ಕೇಳಿದರು. ಜಾನ್ ಎಫ್. ಕೆನಡಿಯವರು ಯುದ್ಧದ ಸಮಯದಲ್ಲಿ ಉಪಯುಕ್ತವೆಂದು ಸಾಬೀತಾಯಿತು, ಅಮೆರಕ ಸಂಸ್ಥಾನ ಪಾಕಿಸ್ತಾನದ ಅಧ್ಯಕ್ಷರು ಭಾರತಕ್ಕೆ ಸಂಬಂಧಿಸಿದಂತೆ 1962 ರಲ್ಲಿ, ತನ್ನ ತಟಸ್ಥತೆಯನ್ನು ಖಾತರಿಪಡಿಸಿಕೊಳ್ಳಲು ಅಯ್ಯಬ್ ಖಾನ್’ಗೆ ಹೇಳಿದರು. ( ಅವರು ಅಮೆರಿಕನ್ನರೊಂದಿಗೆ ನಿಕಟವಾಗಿದ್ದರು). "ರಷ್ಯಾ ಮತ್ತು ಕೆಂಪು ಚೀನಾದ ಕಮ್ಯುನಿಸ್ಟ್ ಆಕ್ರಮಣದ ಬೆದರಿಕೆ ಅಯ್ಯಬ್ ಖಾನ್’ಗೆ ಇತ್ತು". " ಮುಕ್ತ ಮಾರುಕಟ್ಟೆಯ ನೀತಿಗಳನ್ನು ಬೆಂಬಲಿಸುವ ಬಲಪಂಥೀಯ ಗುಂಪುಗಳಿಂದ ನೆಹರು ಅವರ ಸೋವಿಯತ್ ಒಕ್ಕೂಟದೊಂದಿಗಿನ ಭಾರತೀಯ ಸಂಬಂಧವೂ .ಕೂಡಾ ಟೀಕಿಸಲ್ಪಟ್ಟು ಮವಲ್ಯಮಾಪನ ಮಾಡಲ್ಪಟ್ಟಿತು. ಕೆಲವರು ಒಂದು ಶಾಶ್ವತ ಮಿತ್ರರಾಷ್ಟ್ರದ ಮೇಲೆ ನೆಲೆಗೊಳ್ಳಲು ಅಥವಾ ಅವಲಂಬಿಸಲು ಒತ್ತಡಗಳನ್ನು ಮಾಡಿದ್ದರು,. ಆದರೆ ನೆಹರುರವರು ಅಲಿಪ್ತನೀತಿಯ ಚಳುವಳಿಗೆ ತಮ್ಮ ಬದ್ಧತೆಯನ್ನು ಮುಂದುವರಿsಸಿದರು. ಸೇನಾ ಉನ್ನತೀಕರಣಕ್ಕೆ ಸಿದ್ಧತೆ ಯುದ್ಧದ ನಂತರ ಭಾರತೀಯ ಮಿಲಿಟರಿಯಲ್ಲಿ ಭವಿಷ್ಯದ ರೀತಿಯ ಘರ್ಷಣೆಗಳಿಗೆ ಸಿದ್ಧತೆಗಳನ್ನು ಮಾಡಲಾಯಿತು ಮತ್ತು ನೆಹರು ಅವರಿಗೆ ಆ ಬಗ್ಗೆ ಒತ್ತಡವನ್ನು ತಂದಿತು, ಅವರು ಭಾರತದ ಮೇಲೆ ಚೀನಾದ ಆಕ್ರಮಣವನ್ನು ನಿರೀಕ್ಷಿಸಲು ವಿಫಲವಾದ ಕಾರಣದಿಂದಾಗಿ ಜವಾಬ್ದಾರರಾಗಿದ್ದರು. ಅಮೆರಿಕಾದ ಸಲಹೆಯಡಿಯಲ್ಲಿ (ಅಮೆರಿಕಾದ ರಾಯಭಾರಿ ಜಾನ್ ಕೆನ್ನೆಥ್ ಗಾಲ್ಬ್ರೈಥ್ ಅವರು ಯು.ಎಸ್.ನ ಯುದ್ಧದ ಮತ್ತು ಇತರ ಎಲ್ಲ ಉನ್ನತ ನೀತಿಯನ್ನು ರೂಪಿಸುತ್ತಿದ್ದರು. ಕಾಕತಾಳೀಯವಾಗಿ ಕೆನಡಿ ಮತ್ತು ಇತರರು ಅಮೇರಿಕನ್ ಕ್ಯೂಬಾದ ಕ್ಷಿಪಣಿ ಪ್ರಕ್ಷುಬ್ಧತೆಯ’ನ್ನು ಮತ್ತು ನೀತಿಯನ್ನು ರೂಪಿಸುವುದನ್ನು ನೋಡಿಕೊಳ್ಳುತ್ತಿದ್ದರು- ಆ ಸಮಯದಲ್ಲಿ ರಷ್ಯಾವು ಅಮೇರಿಕಾದ ಮೇಲೆ ಧಾಳಿ ಮಾಡಲು ಕ್ಯೂಬಾಕ್ಕೆ ಉನ್ನತ ಕ್ಷಿಪಣಿಗಳನ್ನು ರವಾನಿಸಿತ್ತು.) ನೆಹರೂ ಅವರು ತಮ್ಮ ಉತ್ತಮ ಆಯ್ಕೆಗಳ ಪ್ರಕಾರ, ಭಾರತೀಯ ವಾಯುಪಡೆಯನ್ನು ಚೀನೀ ಮುನ್ನಗ್ಗುವಿಕೆಯನ್ನು ತಡೆಯಲು ಉಪಯೋಗಿಸಲು ಇಷ್ಟಪಡಲಿಲ್ಲ.. ಟಿಬೆಟ್’ನಲ್ಲಿ ತಮ್ಮ ವಾಯುಪಡೆ ಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಚೀನೀಯರಿಗೆ ಇಂಧನ ಅಥವಾ ಇಳಿಯುವದಾರಿಗಳೆರಡೂ ಇರಲಿಲ್ಲ ಎಂದು ಸಿ.ಐ.ಎ ನಂತರ ಬಹಿರಂಗಪಡಿಸಿತು. ಸಾಮಾನ್ಯವಾಗಿ, ಭಾರತೀಯರು ಚೀನಾ ಮತ್ತು ಅದರ ಮಿಲಿಟರಿ ಬಗ್ಗೆ ಹೆಚ್ಚು ಸಂಶಯ ವ್ಯಕ್ತಪಡಿಸಿದ್ದಾರೆ. ಅನೇಕ ಭಾರತೀಯರು ಈ ಯುದ್ಧವನ್ನು ಚೀನಾದೊಂದಿಗೆ ದೀರ್ಘಕಾಲದ ಶಾಂತಿ ಸ್ಥಾಪಿಸುವ ಭಾರತದ ಪ್ರಯತ್ನಗಳಿಗೆ ಚೀನಾ ಬಗೆದ ದ್ರೋಹವೆಂದು ಪರಿಗಣಿಸುತ್ತಾರೆ ಮತ್ತು "ಹಿಂದಿ-ಚೀನಿ ಭಾಯಿ-ಭಾಯಿ" ("ಭಾರತೀಯರು ಮತ್ತು ಚೀನಿಯರು ಸಹೋದರರು" ಎಂಬ ಅರ್ಥದ ಘೋಷಣೆಯನ್ನು ಚೌಎನ್ ಲಾಯ್ ಭಾರತದ ಭೇಟಿಯಲ್ಲಿ ಘೋಷಿಸಿಸಿದ್ದರು) ಎಂದ ನೆಹರು ಅವರ ಹೇಳಿಕೆಯನ್ನು ಪ್ರಶ್ನಿಸಲು ಪ್ರಾರಂಭಿಸಿದರು. ಮಹಾಶಕ್ತಿಗಳ ಶೀತಲ-ಯುದ್ಧದ (ಕೋಲ್ಡ್ ವಾರ್ ಬ್ಲಾಕ್) ಕಾವು ಹೆಚ್ಚುತ್ತಿರುವುದರ ಪ್ರಭಾವವನ್ನು ಪ್ರತಿಭಟಿಸಲು ಭಾರತ ಮತ್ತು ಚೀನಾ ಗಳು ಬಲವಾದ “ಏಷ್ಯಾದ ಆಕ್ಸಿಸ್” ಅನ್ನು (ಏಷಿಯಾದ-ಕೇಂದ್ರ ಪ್ರಭಾವವನ್ನು)) ರೂಪಿಸುತ್ತವೆ ಎಂಬ ನೆಹರುರವರ ಹಿಂದಿನ ಆಶಯವನ್ನು ಯುದ್ಧವು ಅಂತ್ಯಗೊಳಸಿತು. ಸೈನ್ಯದ ಸನ್ನದ್ಧತೆಯು ರಕ್ಷಣಾ ಸಚಿವ ಮೆನನ್ ಅವರ ಮೇಲೆ ಆರೋಪ ಹೊರಿಸಲ್ಪಟ್ಟಿತು, ಅವರು ಭಾರತದ ಮಿಲಿಟರನ್ನು ಮತ್ತಷ್ಟು ಆಧುನಿಕಗೊಳಿಸಬಲ್ಲವರಿಗೆ ಅವಕಾಶ ನೀಡಲು ತಮ್ಮ ಸರ್ಕಾರದ ಹುದ್ದೆಗೆ "ರಾಜೀನಾಮೆ ನೀಡಿದರು". ಭಾರತದ ಸ್ವಂತ ಮೂಲಗಳು ಮತ್ತು ಸ್ವಯಂಪೂರ್ಣತೆಯನ್ನು ಶಾಧಿಸಲು ಭಾರತದ ಶಸ್ತ್ರಾಸ್ತ್ರಗಳ ನೀತಿಯ ಅನುಸಂಧಾನವು ನೆಹರುರವರ ಅಡಿಯಲ್ಲಿ ಶ್ರದ್ಧೆಯಿಂದ ಪ್ರಾರಂಭವಾಯಿತು, ಅದು ಇವರ ಮಗಳು ಇಂದಿರಾ ಗಾಂಧಿಯವರಿಂದ ಪೂರ್ಣಗೊಂಡಿತು, ನಂತರ 1971 ರಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಅದ್ಭುತ ಮಿಲಿಟರಿ ಗೆಲುವು ಸಾಧಿಸಿತು. ಯುದ್ಧದ ಅಂತ್ಯದ ವೇಳೆಗೆ ಭಾರತವು ತನ್ನ ಬೆಂಬಲವನ್ನು ಹೆಚ್ಚಿಸಿಕೊಂಡಿತು. ಟಿಬೆಟಿಯನ್ ನಿರಾಶ್ರಿತರು ಮತ್ತು ಕ್ರಾಂತಿಕಾರಿಗಳಿಗೆ ಅವರು ಬೆಂಬಲಿಸಿದರು, ಅವುಗಳಲ್ಲಿ ಕೆಲವು ಟಿಬೆಟಿಯನ್ನರು ಭಾರತದಲ್ಲಿದ್ದು ಇಬ್ಬರಿಗೂ ಒಂದೇ ಸಾಮಾನ್ಯ ಶತ್ರುವಿನ ವಿರುದ್ಧ ಹೋರಾಡುತ್ತ ಭಾರತದಲ್ಲಿ ನೆಲೆಸಿದ್ದಾರೆ. ಭಿನ್ನತೆಯನ್ನು ಹೊಂದಿದ್ದ ಟಿಬೆಟಿಯನ್ ನಿರಾಶ್ರಿತರು ಸೇರಿದ ಭಾರತೀಯ-ತರಬೇತಿ ಪಡೆದ, ನೆಹರು ಆರಂಭಿಸಿದ "ಟಿಬೆಟಿಯನ್ ಸಶಸ್ತ್ರ ಪಡೆ" 1965 ಮತ್ತು 1971 ರಲ್ಲಿ, ಪಾಕಿಸ್ತಾನದ ವಿರುದ್ಧ ಯುದ್ಧಗಳಲ್ಲಿ ಪರಿಣಾಮಕಾರಿಯಾಗಿ ಹೋರಾಡಿತು. ಪಶ್ಚಿಮ ದೇಶಗಳ ಸಹಾಯ ಪಾಕಿಸ್ತಾನದ ಸಂಘರ್ಷದ ಸಮಯದಲ್ಲಿ, ನೆಹರು ಅಮೆರಿಕ (ಯುಎಸ್) ಅಧ್ಯಕ್ಷ ಜಾನ್ ಎಫ್. ಕೆನಡಿ ಅವರಿಗೆ ಎರಡು ಹತಾಶ ಪತ್ರಗಳನ್ನು ಬರೆದರು, ಫೈಟರ್ ಜೆಟ್ಗಳ 12 ಸ್ಕ್ವಾಡ್ರನ್ಸ್ ಮತ್ತು ಆಧುನಿಕ ರಾಡಾರ್ ವ್ಯವಸ್ಥೆಯನ್ನು ಭಾರತಕ್ಕೆ ಕೊಡಲು ಕೋರಿದರು. ಈ ಜೆಟ್’ಗಳನ್ನು ಭಾರತೀಯ ವಾಯು ಬಲಕ್ಕೆ ಬಲವನ್ನು ಹೆಚ್ಚಿಸುವುದಕ್ಕೆ ಅವಶ್ಯಕವೆಂದು ಪರಿಗಣಿಸಲಾಯಿತು, ಆದ್ದರಿಂದ ವೈಮಾನಿಕ –ವಾಯುಧಾಳಿ ಪ್ರತಿ –ವಾಯುಧಾಳಿಯನ್ನು ಭಾರತೀಯ ಪಡೆ ಸಮರ್ಥವಾಗಿ ಪ್ರಾರಂಭಿಸಬಹುದು (ಚೀನಾದಮೇಲೆ ವಾಯುಪಡೆ ಧಾಳಿಯನ್ನು ಪ್ರತಿಧಾಳಿಯ ಕಾರಣದಿಂದ ಮಾಡಿರಲಿಲ್ಲ.). ಈ ವಿಮಾನಗಳನ್ನು ಅಮೆರಿಕದ ಪೈಲೆಟ್’ಗಳು ಭಾರತೀಯರು ತರಬೇತಿ ಪಡೆಯುವವರೆಗೆ ಚಲಾಯಿಸಬೇಕೆಂದು ನೆಹರೂ ಅವರು ಕೇಳಿದರು. ಈ ವಿನಂತಿಗಳನ್ನು ಕೆನೆಡಿ ಆಡಳಿತ ತಿರಸ್ಕರಿಸಿತು (ಸಿನೋ-ಇಂಡಿಯನ್ ಯುದ್ಧದ ಸಮಯದಲ್ಲಿ ಅಮೇರಿಕ ಕ್ಯೂಬನ್ ಕ್ಷಿಪಣೆ ಧಾಳಿಯ ಸಮಸ್ಯೆಯಲ್ಲಿ ಭಾಗಿಯಾಗಿತ್ತು), ಆದರೂ ಇದು ಇಂಡೋ-ಯುಎಸ್ ಸಂಬಂಧಗಳು ತಣ್ಣಗಾಗಲು ಕಾರಣವಾಯಿತು. ಮಾಜಿ ಭಾರತೀಯ ರಾಯಭಾರಿ ಜಿ ಪಾರ್ಥಸಾರಥಿ ಅವರ ಪ್ರಕಾರ, "ನಾವು ಯುಎಸ್‍ಸ್ನಿಂದ ಏನೂ ಸಿಕ್ಕದೆಹೋದ ನಂತರ ಮಾತ್ರ ಸೋವಿಯೆಟ್ ಯೂನಿಯನ್’ನಿಂದ ಭಾರತಕ್ಕೆ ಶಸ್ತ್ರಾಸ್ತ್ರ ಸರಬರಾಜು ಮಾಡಕೊಳ್ಳಲು ಆರಂಭಿಸಿದೆವು". ಎಂದಿದ್ದಾರೆ. [172] ಪರ್ ಟೈಮ್ ಮ್ಯಾಗಜೀನ್ 1962 ರ ಯುದ್ಧದ ಸಂಪಾದಕೀಯ, ಆದಾಗ್ಯೂ, ಇದು ಈ ರೀತಿ ಇರಲಾರದು ಎಂದು ಸಂಪಾದಕೀಯ ಹೇಳುತ್ತದೆ. 'ವಾಷಿಂಗ್ಟನ್ ಅಂತಿಮವಾಗಿ ಭಾರತಕ್ಕೆ ತನ್ನ ಗಮನವನ್ನು ತಿರುಗಿಸಿದಾಗ, ರಾಯಭಾರಿಯ ವಚನವನ್ನು ಗೌರವಿಸಿತು, 5,000,000 ಡಾಲರ್ ಮೌಲ್ಯದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು, ಹೆವಿ ಮೊರ್ಟರಗಳು ಮತ್ತು ಭೂಸ್ಪೋಟಕಗಳೊಂದಿಗೆ 60 ಯು.ಎಸ್. ಸಂಪೂರ್ಣ ಹನ್ನೆರಡು ದೊಡ್ಡ ಸಿ-130 ಹರ್ಕ್ಯುಲಸ್ ಟ್ರಾನ್ಸ್ಪೋರ್ಟ್ಗಳ ವಿಮಾನಗಳನ್ನು ಭರ್ತಿಮಾಡಿಕೊಂಡು ಯುಎಸ್ ಸಿಬ್ಬಂದಿ ಮತ್ತು ನಿರ್ವಹಣಾ ತಂಡಗಳೊಂದಿಗೆ ಭಾರತೀಯ ಸೇನಾಪಡೆಗಳು ಮತ್ತು ಉಪಕರಣಗಳು ಯುದ್ಧ ವಲಯಕ್ಕೆ ಹಾರಲು ನವ ದೆಹಲಿಗೆ ಕಳಿಸಿದರು. ಬ್ರಿಟನ್ ಬ್ರೆನ್ ಮತ್ತು ಸ್ಟೆನ್ ಬಂದೂಕುಗಳನ್ನು ಇದಕ್ಕೆ ಪೂರಕ ಮಾಡಿತು, ಮತ್ತು ಭಾರತಕ್ಕೆ 150 ಟನ್ ಶಸ್ತ್ರಾಸ್ತ್ರಗಳನ್ನು ಸಾಗಿಸಿತು. ಕೆನಡಾ ಆರು ಸಾರಿಗೆ ವಿಮಾನಗಳನ್ನು ಸಾಗಿಸಲು ತಯಾರಾಯಿತು. ಆಸ್ಟ್ರೇಲಿಯಾ 1,800,000 ಡಾಲರ್ ಮೌಲ್ಯದ ಯುದ್ಧಸಾಮಗ್ರಿಗಳನ್ನು ಭಾರತಕ್ಕೆ ಸಾಲವಾಗಿ ನೀಡಿತು. ಮರಣ ಯಾವುದೇ ಜನರು ನನ್ನ ಬಗ್ಗೆ ಯೋಚಿಸಲು ಬಯಸಿದರೆ, ನಾನು ಹೀಗೆ ಹೇಳಲು ಬಯಸುತ್ತೇನೆ: “ಇವನು ತನ್ನ ಮನಸ್ಸು ಮತ್ತು ಹೃದಯದಿಂದ ಭಾರತ ಮತ್ತು ಭಾರತೀಯ ಜನರನ್ನು ಪ್ರೀತಿಸುತ್ತಾನೆ. ಮತ್ತು ಅವರು ಅದೇ ಪ್ರಕಾರ ತಮ್ಮನ್ನು ಪ್ರೀತಿಸುತ್ತಿದ್ದರು, ಮತ್ತು ಜನರು ತಮ್ಮ ಪ್ರೀತಿಯನ್ನು ಹೇರಳವಾಗಿ ಮತ್ತು ಅತ್ಯತಿಶಯವಾಗಿ ಅವರಿಗೆ ಕೊಟ್ಟರು.” - ಜವಾಹರಲಾಲ್ ನೆಹರು. 1962 ರ ನಂತರ ನೆಹರುರ ಆರೋಗ್ಯವು ಕ್ರಮೇಣವಾಗಿ ಕುಸಿಯಿತು ಮತ್ತು 1963 ರ ಹೊತ್ತಿಗೆ ಕಾಶ್ಮೀರದಲ್ಲಿ ಚೇತರಿಸಿಕೊಳ್ಳಳು ಕೆಲವು ತಿಂಗಳುಗಳನ್ನು ಕಳೆದರು. ಕೆಲವು ಇತಿಹಾಸಕಾರರು ಭಾರತ-ಚೀನಾ ಯುದ್ಧವು ಇವರ ಮೇಲೆ ಈ ಅನಿರೀಕ್ಷಿತ ಆರೋಗ್ಯದ ಕುಸಿತಕ್ಕೆ ಕಾರಣವೆಂದು ಊಹಿಸುತ್ತಾರೆ. ಅವರಿಗೆ ಚೀನಾದ ಆಕಸ್ಮಿಕ ಧಾಳಿಯನ್ನು ನಂಬಿಕೆಯ ದ್ರೋಹವೆಂದು ಭಾವಿಸಿದರು. ಮೇ 26, 1964 ರಂದು ಡೆಹ್ರಾಡೂನ್ನಿಂದ ಮರಳಿದ ನಂತರ ಅವರು ಸಾಕಷ್ಟು ಆರೋಗ್ಯಕರವಾಗಿದ್ದರು ಮತ್ತು ಸಾಮಾನ್ಯವಾಗಿ ಹಿಂದಿನಂತೆ 23:30 ಗಂಟೆಗೆ ಮಲಗುತ್ತಿದ್ದರು. ಅವರು ಬೆಳಿಗ್ಗೆ ಸ್ನಾನದ ಕೊಠಡಿಯಿಂದ ಹಿಂದಿರುಗಿದ ಕೂಡಲೇ ಸುಮಾರು 6:30 ರ ತನಕ ವಿಶ್ರಾಂತಿಯನ್ನು ಹೊಂದುತ್ತಿದ್ದರು, ನೆಹರು ಬೆನ್ನುನೋವಿನ ಸಮಸ್ಯೆಯ ದೂರು ನೀಡಿದರು. ಅವರನ್ನು ಪರೀಕ್ಷಿಸಲು ಬಂದ ವೈದ್ಯರ ಬಳಿ ಸ್ವಲ್ಪಕಾಲ ಮಾತನಾಡಿದ ನೆಹರೂ ಅವರು ತಕ್ಷಣವೇ ಕುಸಿದುಬಿದ್ದರು. ನಂತರ ಅವರು ಸಾಯುವ ತನಕವೂ ಅವರಿಗೆ ಪ್ರಜ್ಞೆ ಮರಳಲಿಲ್ಲ. ಅವರ ಮರಣವನ್ನು ಲೋಕಸಭೆಗೆ 14:00 ಸ್ಥಳೀಯ ಸಮಯಕ್ಕೆ ದಿ.27 ಮೇ 1964 ರಂದು (ಅದೇ ದಿನ) ಘೋಷಿಸಲಾಯಿತು; ಸಾವಿನ ಕಾರಣ ಹೃದಯಾಘಾತ ಎಂದು ನಂಬಲಾಗಿದೆ. ಜವಾಹರಲಾಲ್ ನೆಹರು ದೇಹವನ್ನು ಸಾರ್ವಜನಿಕ ವೀಕ್ಷಣೆಗಾಗಿ ಇರಿಸಲಾಗಿತ್ತು. "ವೇದಿಕೆಯ ಮೇಲೆ ದೇಹವನ್ನು ಇಟ್ಟುಕೊಂಡಿದ್ದರಿಂದ" ರಘುಪತಿ ರಾಘವ ರಾಜರಾಮ್ "ಅನ್ನು ಪಠಿಸಿದರು. ಮೇ 28 ರಂದು, ದೆಹಲಿಯ ಬೀದಿಗಳಲ್ಲಿ ಮತ್ತು ಸಮಾಧಿ ಮೈದಾನದಲ್ಲಿ ಸೇರ್ಪಡೆಯಾದ 15 ಲಕ್ಷ ಜನಕ್ಕೂ ಹೆಚ್ಚು ಶೋಕಾಚರಣೆಗೆ ಯಮುನಾ ತೀರದಲ್ಲಿ ಸಾಕ್ಷಿಯಾಗಿದ್ದರು. ಶಾಂತಿವನದಲ್ಲಿ ಹಿಂದೂ ಧಾರ್ಮಿಕ ಕ್ರಿಯೆಗಳಿಗೆ ಅನುಸಾರವಾಗಿ ನೆಹರು ಅವರ ಅಂತ್ಯಕ್ರಿಯೆ ನೆಡಸಲಾಯಿತು. ನೆಹರೂ, ಒಬ್ಬ ವ್ಯಕ್ತಿಯಾಗಿ ಮತ್ತು ರಾಜಕಾರಣಿಯಾಗಿ ಭಾರತದ ಮೇಲೆ ಯಾವಬಗೆಯ ಶಕ್ತಿಯುತ ಪ್ರಭಾವದ ಮುದ್ರೆಯನ್ನು ಮಾಡಿದ್ದರೆಂದರೆ, 1964 ರ ಮೇ 27 ರಂದು ಅವರ ಮರಣದ ನಂತರ ಭಾರತವು ತನ್ನ ನಾಯಕತ್ವಕ್ಕೆ ಸ್ಪಷ್ಟ ರಾಜಕೀಯ ಉತ್ತರಾಧಿಕಾರಿಯಾಗಲು ತಕ್ಕವರನ್ನು ಕಂಡುಕೊಳ್ಳುವುದು ಕಷ್ಟವಾಯಿತು. (ಆನಂತರ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಪ್ರಧಾನಿಯಾಗಿ ಆರಿಸಲಾಯಿತು) ನೆಹರು ಅವರು ಭಾರತದಲ್ಲಿ ಅಂತಹ ಶಕ್ತಿಯುತ ನಾಯಕತ್ವವನ್ನು ಕೊಟ್ಟಿದ್ದರು. ಗಾಂಧಿಯವರ ಹತ್ಯೆಯ ಸಮಯದಲ್ಲಿ ನೆಹರು ಹೇಳಿದ ಆದೇ ಮಾತುಗಳಲ್ಲಿ ಹೇಳಿದರು; "ಬೆಳಕು ಹೊರಟುಹೋಗಿದೆ" ಎಂದು ಭಾರತೀಯ ಸಂಸತ್ತಿಗೆ ಅವರ ಮರಣವನ್ನು ಘೋಷಿಸಲಾಯಿತು. ವೈಯುಕ್ತಿಕ ಜೀವನ ನೆಹರೂ ಕಮಲಾ ಕೌಲ್’ರನ್ನು 1916 ರಲ್ಲಿ ವಿವಾಹವಾದರು. ಅವರ ಏಕೈಕ ಪುತ್ರಿ ಇಂದಿರಾ 1917 ರಲ್ಲಿ ಒಂದು ವರ್ಷದ ನಂತರ ಜನಿಸಿದಳು. ಕಮಲಾ ನವೆಂಬರ್ 1924 ರಲ್ಲಿ ಗಂಡುಮಗುವಿಗೆ ಜನ್ಮ ನೀಡಿದರು, ಆದರೆ ಅದು ಕೇವಲ ಒಂದು ವಾರದವರೆಗೆ ಮಾತ್ರಾ ಜೀವಿಸಿತ್ತು. 1942 ರಲ್ಲಿ ಇಂದಿರಾ ಫಿರೋಜ್ ಗಾಂಧಿಯವರನ್ನು ಮದುವೆಯಾದರು. ಅವರಿಗೆ ರಾಜೀವ್ (1944) ಮತ್ತು ಸಂಜಯ್ (1946) ಇಬ್ಬರು ಪುತ್ರರು ಇದ್ದರು. ಕಮಲಾರ ಮರಣದ ನಂತರ, ನೆಹರು, ವಿಧುರನಾಗಿ ಉಳಿದರು, ಅವರು ಕೆಲವು ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದನೆಂದು ಆರೋಪಿಸಲಾಯಿತು. ಇವುಗಳಲ್ಲಿ ಶ್ರದ್ಧಾ ಮಾತಾ, ಪದ್ಮಜಾ ನಾಯ್ಡು ಮತ್ತು ಎಡ್ವಿನಾ ಮೌಂಟ್ಬ್ಯಾಟನ್ ಸೇರಿದ್ದಾರೆ. ಎಡ್ವಿನಾ ಅವರ ಪುತ್ರಿ ಪಮೇಲಾ ಎಡ್ವಿನಾದೊಂದಿಗೆ ನೆಹರುರ ಪ್ಲ್ಯಾಟೋನಿಕ್ (ದೈಹಿಕ ಸಂಬಂಧವಿಲ್ಲದ ಪ್ರೇಮ) ಸಂಬಂಧವನ್ನು ಒಪ್ಪಿಕೊಂಡರು. 1960 ರಲ್ಲಿ ಎಡ್ವಿನಾ ಮೌಂಟ್ಬ್ಯಾಟನ್ ಸಮುದ್ರದ ಸಮಾಧಿಗೆ ಭಾರತೀಯ ನೌಕಾದಳದ ಸೈನ್ಯವನ್ನು ಕಳುಹಿಸಲು ವೈಯಕ್ತಿಕ ನಿರ್ಧಾರವನ್ನು ನೆಹರೂ ತೆಗೆದುಕೊಂಡರು. ನೆಹರೂ ಅವರ ಸಹೋದರಿ ವಿಜಯ ಲಕ್ಷ್ಮಿ ಪಂಡಿತ್ ಇಂದಿರಾ ಗಾಂಧಿಯವರ ಸ್ನೇಹಿತ ಮತ್ತು ಜೀವನಚರಿತ್ರೆಕಾರ ಪಪುಲ್ ಜಯಕರ್ ಅವರಿಗೆ ಸರೋಜಿನಿ ನಾಯ್ಡು ಮಗಳು ಸ್ವಾತಂತ್ರ ಹೋರಾಟಗಾರ್ತಿ ಕಾಂಗ್ರೆಸ್ ಕಾರ್ಯಕರ್ತೆ, ನೆಹರೂ ಅಭಿಮಾನಿಯಾದ ಪದ್ಮಜಾ ನಾಯ್ಡು ಅನೇಕ ವರ್ಷಗಳ ಕಾಲ ನೆಹರೂ ಇದ್ದ ತೀನ್ ಮೂರ್ತಿ ಭವನದ ಹೊರಗೃಹದಲ್ಲಿ ವಾಸಿಸುತ್ತಿದ್ದರು ಎಂದು ತಿಳಿಸಿದರು. ನೆಹರು ಅವರು ತಾಯಿಯನ್ನು ಕಳೆದುಕೊಂಡ ಮಗಳು ಇಂದಿರಾ ಮನಸ್ಸಿಗೆ ನೋವಾಗುವುದೆಂದು ಎರಡನೇ ಮದುವೆಗೆ ಮನಸ್ಸು ಮಾಡಲಿಲ್ಲ. ಶ್ರದ್ಧಾ ಮಾತಾ ಸನ್ಯಾಸಿಯಾಗಿದ್ದು ಹಿಂದೂ ಧರ್ಮದ ಬಗೆಗೆ ಅವರು ಉತ್ತಮ ಪ್ರವಚನ ಮಾಡುತ್ತಿದ್ದರು. ನೆಹರು ಮಂತ್ರಿಮಂಡಲದಲ್ಲಿ ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿದ್ದ ಶ್ಯಾಮ್ ಪ್ರಸಾದ್ ಮುಖರ್ಜಿಯವರು ತಮಗೆ ಆಪ್ತರಾಗಿದ್ದ ಮತ್ತು ದೆಹಲಿಗೆ ಬಂದಾಗ ಅವರಲ್ಲಿ ಉಳಿಯುತ್ತಿದ್ದ,ಮತ್ತು ತಮ್ಮ ಆಭಿಮಾನಿಯಾಗಿದ್ದ ಸಂನ್ಯಾಸಿನಿ ಶ್ರದ್ಧಾ ಮಾತಾರನ್ನು ಭೇಟಿಮಾಡಲು ಮತ್ತು ಹಿಂದೂಧರ್ಮದ ಬಗ್ಗೆ ಒಂದು ವಾರ ಅವರ ಪ್ರವಚನ ಕೇಳಲು, ನೆಹರೂ ಬಿಡುವಿಲ್ಲವೆಂದರೂ ಅವರನ್ನು ಮುಖರ್ಜಿ ಬಹಳ ಒತ್ತಾಯಿಸಿದರು. ಅದಕ್ಕೆ ಮಣಿದು ಅವರನ್ನು ಭೇಟಿಮಾಡಲು ನೆಹರೂ ಒಪ್ಪ್ಪಿದರು. ಹಾಗೆ ಆದ ಒಂದು ವಾರದ ನಂತರ ಪಟೇಲರು ಸನ್ಯಾಸಿನಿಯ ಭೇಟಿಯ ವದಂತಿಯ ಬಗೆಗೆ ನೆಹರೂ ಅವರಿಗೆ ಪತ್ರ ಬರೆದು ವಿಚಾರಿಸಿದಾಗ, ಸಂನ್ಯಾಸಿನಿಯು ತಮ್ಮ ಧಾರ್ಮಿಕ ಸಿದ್ದಾಂತವನ್ನು ತಮಗೆ ಹೇಳುತ್ತಿದ್ದಾರೆ – ಮತ್ತು ತಾವು ತಮ್ಮ ಸಿದ್ದಾಂತವನ್ನು ಅವರಿಗೆ ಹೇಳುತ್ತಿದ್ದೇನೆ – ಅಷ್ಟೆ ಎಂದು ಪಟೆಲರಿಗೆ ಪತ್ರ ಬರೆದರು. ಅದು ನಂತರ ಗಾಸಿಪ್ ಆಯಿತು. ಆದರೆ ನೆಹರು ತಮ್ಮ ಜೀವನದಲ್ಲಿ ಯಾವುದನ್ನೂ ಮುಚ್ಚಿಡಲು ಪ್ರಯತ್ನಿಸಲಿಲ್ಲ. ಆ ಸಂಬಂಧ ಎಲ್ಲಾ ಪತ್ರಗಳನ್ನು ದಾಖಲೆ ವಿಭಾಗಕ್ಕೆ ಕಳಿಸಿದರು. ನೆಹರು ಪ್ರಧಾನಿಯಾಗಿದ್ದ ಬಹಳಷ್ಟು ಅವಧಿಯಲ್ಲಿ ಇಂದಿರಾ ತಮ್ಮ ತಂದೆಗೆ ಅನಧಿಕೃತವಾಗಿ ವೈಯಕ್ತಿಕ ಸಹಾಯಕರಾಗಿ ಸೇವೆ ಸಲ್ಲಿಸಿದರು. 1950 ರ ಅಂತ್ಯದ ವೇಳೆಗೆ ಇಂದಿರಾ ಗಾಂಧಿ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಆ ಅಧಿಕಾರದಲ್ಲಿ, 1959 ರಲ್ಲಿ ಕಮ್ಯುನಿಸ್ಟ್ ನೇತೃತ್ವದ ಕೇರಳ ರಾಜ್ಯ ಸರ್ಕಾರವನ್ನು ವಜಾಮಾಡುವುದರಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. ಧರ್ಮ ಮತ್ತು ವೈಯಕ್ತಿಕ ನಂಬಿಕೆಗಳು ಹಿಂದೂ ಅಗ್ನೊಸ್ಟಿಕ್ (ಸಂದೇಹವಾದಿ) ಎಂದು ವರ್ಣಿಸಲ್ಪಟ್ಟ, ಮತ್ತು "ವೈಜ್ಞಾನಿಕ ಮಾನವತಾವಾದಿ" ಎಂದು ನೆಹರು ಅವರ ವ್ಯಕ್ತ್ತಿತ್ವ-ಸ್ವಭಾವವನ್ನು ಹೇಳಬಹುದು. ಧಾರ್ಮಿಕ ನಿಷೇಧದ ನಿಯಮಗಳು ಗಳು ಭಾರತವನ್ನು ಮುಂದೆ ಅಭಿವೃದ್ಧಿಯತ್ತ ಸಾಗಲು ಮತ್ತು ಆಧುನಿಕ ಪರಿಸ್ಥಿತಿಗಳಿಗೆ ಅಳವಡಿಸಿಕೊಳ್ಳುವುದನ್ನು ತಡೆಗಟ್ಟುತ್ತವೆ ಎಂದು ನೆಹರೂ ಅಭಿಪ್ರಾಯಪಟ್ಟರು: "ಯಾವುದೇ ತತ್ತ್ವಗಳಿಗೆ ಮತ್ತು ಧರ್ಮಪ್ರಜ್ಞೆಗೆ ಗುಲಾಮರಲ್ಲದ ಮನಸ್ಥಿತಿಯ ದೇಶ ಅಥವಾ ಜನರು ಪ್ರಗತಿ ಸಾಧಿಸಬಹುದು ಮತ್ತು ನಮ್ಮ ದೇಶ ಮತ್ತು ಜನರು ಬೇಸರಪಡುವಷ್ಟು ಅಸಾಧಾರಣವಾದ ತಾತ್ವಿಕ ಕಟ್ಟಾನಂಬಿಗೆಯವರೂ ಮತ್ತು ಸಂಕುಚಿತ ಮನಸ್ಸಿನವರಾಗಿದ್ದಾರೆ." ಧರ್ಮವೆಂದು ಕರೆಯಲ್ಪಡುವ ಅಥವಾ ಆ ಬಗೆಯ ನಂಬುಗೆ ಯಾವುದೇ ಪ್ರಮಾಣದಲ್ಲಿರಲಿ, ಭಾರತದಲ್ಲಿ ಮತ್ತು ಬೇರೆಡೆಯಲ್ಲಿ, ಸಂಘಟಿತ ಧರ್ಮದ ಚಿತ್ರಣವು (ಇತಿಹಾಸವು) ಭೀತಿಯಿಂದ ತುಂಬಿದೆ ಮತ್ತು ನಾನು ಆಗಾಗ್ಗೆ ಅದನ್ನು ಖಂಡಿಸಿದ್ದೇನೆ. ಅದನ್ನು ಶುದ್ಧವಾಗಿ ಮಾಡಲು ಗುಡಿಸಿ ಶುದ್ಧಮಾಡಲು ಬಯಸುತ್ತೇನೆ. ಬಹುಮಟ್ಟಿಗೆ ಅದು ಯಾವಾಗಲೂ ಕುರುಡು ನಂಬಿಕೆ ಮತ್ತು ಪ್ರತಿಭಟನೆಯ ಪ್ರತಿಕ್ರಿಯೆ, ಧರ್ಮಾಂಧತೆ ಮತ್ತು ಹುಸಿ ಧರ್ಮನಿರತೆ, ಮೂಢನಂಬಿಕೆ, ಶೋಷಣೆ ಮತ್ತು ಕೆಲವರ ಹಿತಾಸಕ್ತಿಗಳ ಸಂರಕ್ಷಣೆಗಾಗಿ ನಿಂತಿದೆ. - ಸ್ವಾತಂತ್ರ್ಯದ ಕಡೆಗೆ: ಜವಾಹರಲಾಲ್ ನೆಹರುರ ಆತ್ಮಚರಿತ್ರೆ (1936); ಪುಟಗಳು 240-241. ಅವರ ಆತ್ಮಚರಿತ್ರೆಯಲ್ಲಿ, ಅವರು ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ, ಮತ್ತು ಭಾರತದಲ್ಲಿ ಅವುಗಳ ಪ್ರಭಾವವನ್ನು ವಿಶ್ಲೇಷಿಸಿದ್ದಾರೆ. ಅವರು ಭಾರತವನ್ನು ಜಾತ್ಯತೀತ ರಾಷ್ಟ್ರವೆಂದು ರೂಪಿಸಲು ಬಯಸಿದ್ದರು; ಅವರ ಜಾತ್ಯತೀತ ನೀತಿಗಳು ಚರ್ಚೆಯ ವಿಷಯವಾಗಿ ಉಳಿದಿವೆ. ಭಾರತಕ್ಕೆ ನೆಹರು ಕೊಡಿಗೆ (ಲೆಗಸಿ) ಭಾರತದ ಮೊದಲ ಪ್ರಧಾನಮಂತ್ರಿಯಾಗಿ ಮತ್ತು ವಿದೇಶ ವ್ಯವಹಾರಗಳ ಸಚಿವರಾಗಿ ಜವಾಹರಲಾಲ್ ನೆಹರೂ ಆಧುನಿಕ ವಿದೇಶಾಂಗ ನೀತಿಯೊಂದಿಗೆ ಆಧುನಿಕ ಭಾರತ ಸರ್ಕಾರ ಮತ್ತು ರಾಜಕೀಯ ಸಂಸ್ಕೃತಿಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಗ್ರಾಮೀಣ ಭಾರತದ ದೂರದ ಮೂಲೆಗಳಲ್ಲಿ ಮಕ್ಕಳನ್ನು ತಲುಪುವ ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣವನ್ನು ಒದಗಿಸುವ ವ್ಯವಸ್ಥೆಯನ್ನು ರಚಿಸಿದ್ದಕ್ಕಾಗಿ ಅವರು ಪ್ರಶಂಸಿಸಲ್ಪಟ್ಟಿದ್ದಾನೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮುಂತಾದ ವಿಶ್ವ-ಮಟ್ಟದ ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ಧಿಗೆ ನೆಹರೂ ಅವರ 'ಶಿಕ್ಷಣ ನೀತಿ'ಯು ಕೊಡಿಗೆ ನೀಡುತ್ತದೆ. ಆದ್ದರಿಂದ ಅವರು ಆಧುನಿಕ ಭಾರತದ ನಿರ್ಮಾಪಕ ಎಂದು ಗುರಿತಿಸಲ್ಪಟ್ಟಿದ್ದಾರೆ S ಅದಲ್ಲದೆ, ನೆಹರು ಅವರರ ನಿಲುವು ಒಂದು ರಾಷ್ಟ್ರೀಯತಾವಾದಿಯಾಗಿ ನಿಂತಿದ್ದು, ಪ್ರಾದೇಶಿಕ ವೈವಿಧ್ಯತೆಗಳನ್ನು ಅದು ಇರುವ ಹಾಗೆಯೇ ಮೆಚ್ಚಿ ಭಾರತೀಯರ ನಡುವೆ ಒಂದು ಸಾಮಾನ್ಯತೆಯನ್ನು ಒತ್ತಿ ಹೇಳಿದ ನೀತಿಗಳನ್ನು ಜಾರಿಗೆ ತಂದರು. ಉಪಖಂಡದಿಂದ ಬ್ರಿಟಿಷ್ ವಾಪಸಾತಿಯ ನಂತರ ಪ್ರಾದೇಶಿಕ ಮುಖಂಡರು ಪರಸ್ಪರ ಎದುರಾಳಿಗಳಾಗಿ ಪರಸ್ಪರ ವಿರುದ್ಧ ನಿಂತು ಸಂಬಂಧವಿಲ್ಲದ ಕಾರಣಗಳಿಂದ ಭಾರತದಲ್ಲಿ ಸ್ವಾತಂತ್ರ್ಯಾನಂತರದ ಭಿನ್ನಾಭಿಪ್ರಾಯಗಳು ಆವರಿಸಲ್ಪಟ್ಟಿತು. ಆದ್ದರಿಂದ ಅವರು ಭಾರತದ ಪ್ರಾದೇಶಿಕ ವೈವಿಧ್ಯತೆಗಳನ್ನು ಇರುವಹಾಗೆಯೇ ಮೆಚ್ಚಿ ಭಾರತೀಯರ ನಡುವೆ ಒಂದು ಸಾಮಾನ್ಯತೆಯನ್ನು ಒತ್ತಿ ಹೇಳಿದ ನೀತಿ ಪ್ರಮುಖವಾಗಿತ್ತು. ಸಂಸ್ಕೃತಿಯ ವ್ಯತ್ಯಾಸಗಳು ಮತ್ತು ಅದರಲ್ಲೂ ವಿಶೇಷವಾಗಿ, ಹೊಸ ರಾಷ್ಟ್ರದ ಏಕತೆಗೆ ಭಾಷೆ ಬೆದರಿಕೆ ಹಾಕಿದರೂ, (ಭಾಷಾವಾದದ ಅತಿಅಭಿಮಾನ -ಅನ್ಯ ಭಾಷಾ ದ್ವೇಷ) ಅದರ ಸಂತುಲನಕ್ಕಾಗಿ ನ್ಯಾಷನಲ್ ಬುಕ್ ಟ್ರಸ್ಟ್ ಮತ್ತು ನ್ಯಾಷನಲ್ ಲಿಟರರಿ ಅಕಾಡೆಮಿ ಮುಂತಾದ ಕಾರ್ಯಕ್ರಮಗಳನ್ನು ನೆಹರು ಸ್ಥಾಪಿಸಿದರು. ಇದು ಭಾಷೆಗಳ ನಡುವೆ ಪ್ರಾದೇಶಿಕ ಸಾಹಿತ್ಯದ ಅನುವಾದವನ್ನು ಪ್ರೋತ್ಸಾಹಿಸಿತು ಮತ್ತು ಪ್ರದೇಶಗಳ ನಡುವೆ ವಸ್ತು - ವಿಚಾರಗಳ ವರ್ಗಾವಣೆಯನ್ನು ಆಯೋಜಿಸಿತು. ಇವು ಒಂದು ಏಕೀಕೃತ ಭಾರತವನ್ನು ಜನರು ಅನುಸರಿಸುವಲ್ಲಿ ಸಹಕಾರಿಯಾಗಿದೆ, ನೆಹರೂ ಅವರು "ಸಮಗ್ರತೆಯಿಂದ ಸಂಯೋಜಿತರಾಗಿ ಇಲ್ಲವೇ ನಾಶವಾಗಿ" ಎಂದು ಎಚ್ಚರಿಕೆ ನೀಡಿದರು. ಇತಿಹಾಸಕಾರ ರಾಮಚಂದ್ರ ಗುಹಾ ಬರೆಯುತ್ತಾರೆ, "ನೆಹರು 1958 ರಲ್ಲಿ ನಿವೃತ್ತರಾದರು, ಅವರು ಕೇವಲ ಭಾರತದ ಅತ್ಯುತ್ತಮ ಪ್ರಧಾನಿಯಾಗಿರಲಿಲ್ಲ, ಆದರೆ ಆಧುನಿಕ ಪ್ರಪಂಚದ ಮಹಾನ್ ರಾಜಕಾರಣಿಗಳೆಂದು ನೆನಪಿಸಿಕೊಳ್ಳುತ್ತಾರೆ". ಹೀಗೆ ನೆಹರು, ಭಾರತಕ್ಕೆ ಒಂದು ಸಹಬಾಳ್ವೆಯ ಪರಂಪರೆಯನ್ನು ನೀಡಿದರು , ಅದನ್ನು, ವಿವಾದಿತ ಸಹಬಾಳ್ವೆಯ ಕೊಡಿಗೆಯನ್ನು ಬಿಟ್ಟಹೋಗಿದ್ದಾರೆ ಎಂದೂ ಹೇಳುವರು "ಭಾರತದ ಪ್ರಗತಿಗಾಗಿ ಅದನ್ನು- ಅವರ ಕೊಡಿಗೆಯನ್ನು ಮೆಚ್ಚಿ ಆರಾಧಿಸಬಹುದು ಅಥವಾ ಅದನ್ನು ಬಿಟ್ಟು ಹಿಂದೆಬೀಳಬಹುದು". ಜ್ಞಾಪನೆ (Commemoration) ಅವರ ಜೀವಿತಾವಧಿಯಲ್ಲಿ, ಜವಾಹರಲಾಲ್ ನೆಹರು ಭಾರತದಲ್ಲಿ ಒಂದು ವಿಶಿಷ್ಟವಾದ ಸ್ಥಾನಮಾನವನ್ನು ಪಡೆದರು ಮತ್ತು ಅವರ ಆದರ್ಶ ಮತ್ತು ನಿಷ್ಠಾವಂತತೆಗಾಗಿ ವಿಶ್ವದಾದ್ಯಂತ ವ್ಯಾಪಕವಾಗಿ ಮೆಚ್ಚುಗೆಯನ್ನು ಪಡೆದರು. ಅವರ ಹುಟ್ಟು ಹಬ್ಬದಂದು, ನವೆಂಬರ್‍ನಲ್ಲಿ ಬಾಲ ದಿವಸ್ ("ಮಕ್ಕಳ ದಿನ") ಎಂದು ಭಾರತದಲ್ಲಿ ಆಚರಿಸಲಾಗುತ್ತದೆ. ಅವರ ಜೀವಿತಾವಧಿಯ ದೊಡ್ಡಬಯಕೆ ಮತ್ತು ಮಕ್ಕಳ ಮತ್ತು ಯುವಜನರ ಕಲ್ಯಾಣ. ನೆಹರು ಅವರ ಶಿಕ್ಷಣ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಕೆಲಸವನ್ನು ಗುರುತಿಸಿ, ಭಾರತದಾದ್ಯಂತ ಮಕ್ಕಳು ಚಾಚಾ ನೆಹರೂ (ಅಂಕಲ್ ನೆಹರು) ಎಂದು ನೆನಪಿಸಿಕೊಳ್ಳುತ್ತಾರೆ. ನೆಹರು ಅವರು ಕಾಂಗ್ರೆಸ್ ಪಕ್ಷದ ಜನಪ್ರಿಯ ಚಿಹ್ನೆಯಾಗಿದ್ದಾರೆ, ಆ ಪಕ್ಷ ಅವರ ಸ್ಮರಣೆಯನ್ನು ಆಗಾಗ್ಗೆ ಆಚರಿಸುತ್ತದೆ. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅವರ ಶೈಲಿಯ ಉಡುಪು, ವಿಶೇಷವಾಗಿ ಗಾಂಧಿ ಕ್ಯಾಪ್ ಮತ್ತು "ನೆಹರೂ ಜಾಕೆಟ್", ಧರಿಸಿ ಅವರ ನಡವಳಿಕೆಗಳನ್ನು ಅನುಕರಿಸುತ್ತಾರೆ. ನೆಹರು ಅವರ ಆದರ್ಶಗಳು ಮತ್ತು ನೀತಿಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮತ್ತು ಪ್ರಮುಖ ರಾಜಕೀಯ ತತ್ತ್ವವನ್ನು ರೂಪಿಸುವಲ್ಲಿ ಮುಖ್ಯ ಪಾತ್ರವಹಿಸುತ್ತವೆ. ಕಾಂಗ್ರೆಸ್ ಪಕ್ಷ ಮತ್ತು ರಾಷ್ಟ್ರೀಯ ಸರಕಾರದ ನಾಯಕತ್ವಕ್ಕೆ ಅವರ ಮಗಳು ಇಂದಿರಾ ಅವರ ಉದಯದಲ್ಲಿ ಅವರ ಪರಂಪರೆಗೆ ಭಾವನಾತ್ಮಕ ಸಂಬಂಧವಿದೆ. ನೆಹರು ಅವರ ವೈಯಕ್ತಿಕ ಆದ್ಯತೆಯ ಶೆರ್ವಾನಿ ಇಂದು ಉತ್ತರ ಭಾರತದಲ್ಲಿ ಔಪಚಾರಿಕ ಉಡುಗೆ ಎಂದು ಪರಿಗಣಿಸಲಾಗಿದೆ; ತಮ್ಮ ಹೆಸರನ್ನು ಒಂದು ವಿಧದ ಕ್ಯಾಪ್’ಗೆ ನೀಡುವ ಬದಲು, ನೆಹರೂ ಜಾಕೆಟ್- ಅಥವಾ ನೆಹರೂ ಷರಟಿಗೆ ಆ ಶೈಲಿಗೆ ಅವರ ಆದ್ಯತೆಯ ಕಾರಣದಿಂದ ಅವರ ಗೌರವಾರ್ಥವಾಗಿ ಆ ಹೆಸರಿಸಲಾಗಿದೆ. 1.ಭಾರತದಾದ್ಯಂತ ಹಲವಾರು ಸಾರ್ವಜನಿಕ ಸಂಸ್ಥೆಗಳು ಮತ್ತು ಸ್ಮಾರಕಗಳು ನೆಹರೂ ಅವರ ನೆನಪಿಗಾಗಿ ಸಮರ್ಪಿಸಲಾಗಿದೆ. ದಿಲ್ಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವು ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿದೆ. ಮುಂಬೈ ನಗರದ ಸಮೀಪವಿರುವ ಜವಾಹರ್ಲಾಲ್ ನೆಹರು ಬಂದರು ಆಧುನಿಕ ಬಂದರು ಮತ್ತು ದೊಡ್ಡ ಸರಕು ಮತ್ತು ಸಂಚಾರ ಲೋಡ್ ನಿರ್ವಹಿಸಲು ವಿನ್ಯಾಸಗೊಳಿಸಿದ ಡಾಕ್/ ಬಂದರಾಗಿದೆ. ದೆಹಲಿಯಲ್ಲಿ ನೆಹರು ಅವರ ನಿವಾಸವನ್ನು ಈಗ ತೀನ್ ಮೂರ್ತಿ ಹೌಸ್ ಎಂದು ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವಾಗಿ ಮಾರ್ಪಡಿಸಲಾಗಿದೆ. ಮುಂಬೈ, ದೆಹಲಿ, ಬೆಂಗಳೂರು, ಅಲಹಾಬಾದ್ ಮತ್ತು ಪುಣೆಯಲ್ಲಿ ಸ್ಥಾಪಿಸಿರುವ ಐದು ನೆಹರೂ ಪ್ಲಾನೆಟೇರಿಯಂ ಗಳನ್ನು ಅವರ ಹೆಸರಿನಲ್ಲಿ ಸಂರಕ್ಷಿಸಲಾಗಿದೆ. ಜವಹರಲಾಲ್ ನೆಹರು ಸ್ಮಾರಕ ನಿಧಿಯ ಕಚೇರಿಗಳನ್ನು 1964 ರಲ್ಲಿ ಸ್ಥಾಪಿಸಿದ್ದು ಅದರ ಕಛೇರಿ ಈ ಸಂಕೀರ್ಣದಲ್ಲಿದೆ. ಅವನ್ನು ಭಾರತದ ಅಧ್ಯಕ್ಷರಾಗಿದ್ದ ಸರ್ವೆಪಲ್ಲಿ ರಾಧಾಕೃಷ್ಣನ್ ನೇತೃತ್ವದಲ್ಲಿ ಸ್ಥಾಪಿಸಲಾಯಿತು. 1968 ರಲ್ಲಿ ಸ್ಥಾಪನೆಯಾದ ಪ್ರತಿಷ್ಠಿತ 'ಜವಾಹರಲಾಲ್ ನೆಹರು ಸ್ಮಾರಕ ಫೆಲೋಶಿಪ್' ಪ್ರತಿಷ್ಠಾನ ಕೂಡಾ ಹೊರಹೊಮ್ಮಿದೆ. ನೆಹರು ಕುಟುಂಬದ ಮನೆಗಳು ಆನಂದ್ ಭವನ ಮತ್ತು ಸ್ವರಾಜ್ ಭವನಗಳಲ್ಲಿ ನೆಹರು ಮತ್ತು ಅವನ ಕುಟುಂಬದ ಆಸ್ತಿಯನ್ನು ಸಂರಕ್ಷಿಸುವುದಕ್ಕಾಗಿ ಮೀಸಲಿಡಲಾಗಿದೆ. ಜನಪ್ರಿಯ ಸಂಸ್ಕೃತಿಯಲ್ಲಿ ನೆಹರುರ ಜೀವನ ಕುರಿತು ಹಲವು ಸಾಕ್ಷ್ಯಚಿತ್ರಗಳು ನಿರ್ಮಾಣಗೊಂಡಿವೆ. ಅವರ ಬಗೆಗೆ ಕಾಲ್ಪನಿಕ ಚಿತ್ರಗಳನ್ನೂ ಚಿತ್ರಿಸಲಾಗಿದೆ. ರಿಚರ್ಡ್ ಅಟೆನ್ಬರೋ ಅವರ 1982 ರ ಚಲನಚಿತ್ರ ಗಾಂಧಿ,- ಶ್ಯಾಮ್ ಬೆನೆಗಲ್’ರ 1988 ರ ದೂರದರ್ಶನದ ಸರಣಿಯ ಭಾರತ್ ಎಕ್ ಖೋಜ್,- ನೆಹರು ಅವರ ದಿ ಡಿಸ್ಕವರಿ ಆಫ್ ಇಂಡಿಯಾ ಮತ್ತು 2007 ರ ಟಿವಿ ಚಲನಚಿತ್ರದಲ್ಲಿ ದಿ ಲಾಸ್ಟ್ ಡೇಸ್- ಎಂಬ ಶೀರ್ಷಿಕೆಯಡಿಯಲ್ಲಿ ರಚಿತವಾಗಿದೆ. ಕೇತನ್ ಮೆಹ್ತಾರ ಸರ್ದಾರ್ ಚಿತ್ರದಲ್ಲಿ, ನೆಹರು ಅವರನ್ನು ಬೆಂಜಮಿನ್ ಗಿಲಾನಿ ಚಿತ್ರತಯಾರಿಸಿದ್ದರು. ಗಿರೀಶ್ ಕಾರ್ನಾಡ್ ಅವರ ಐತಿಹಾಸಿಕ ನಾಟಕವಾದ ತುಘಲಕ್ (1962) ನೆಹರುರ ಯುಗದ ಬಗ್ಗೆ ಒಂದು ವಿಚಾರವಾಗಿದೆ. 1970 ರ ದಶಕದಲ್ಲಿ ದೆಹಲಿಯ ಪುರನಾ ಕಿಲಾದಲ್ಲಿ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ರೆಪರ್ಟರಿ ಯೊಂದಿಗೆ ಇಬ್ರಾಹಿಂ ಅಲ್ಕಾಝಿ ಅವರು ಇದನ್ನು ಆಯೋಜಿಸಿದರು ಮತ್ತು ನಂತರ 1982 ರಲ್ಲಿ ಲಂಡನ್’ನ ಭಾರತದ ಉತ್ಸವದಲ್ಲಿ ಪ್ರದರ್ಶಿಸಿದರು. ಬರಹಗಳು ನೆಹರು ಇಂಗ್ಲಿಷ್’ನ ಒಬ್ಬ ಸಮೃದ್ಧ ಬರಹಗಾರರಾಗಿದ್ದರು. ಅವರ ಬರಹಗಳು ಇಂದಿಗೂ ಜಗತ್‍ಪ್ರಸಿದ್ಧವಾಗಿವೆ. ಅವರ ‘ದಿ ಡಿಸ್ಕವರಿ ಆಫ್ ಇಂಡಿಯಾ’, ‘ಗ್ಲಿಂಪ್ಸಸ್ ಆಫ್ ವರ್ಲ್ಡ್ ಹಿಸ್ಟರಿ’ ಮತ್ತು ಅವರ ‘ಆತ್ಮಚರಿತ್ರೆ’, ‘ಟುವರ್ಡ್ ಫ್ರೀಡಮ್’ ಮೊದಲಾದ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಅವರು ತಮ್ಮ ಮಗಳು ಇಂದಿರಾ ಗಾಂಧಿಯವರಿಗೆ 30 ಪತ್ರಗಳನ್ನು ಬರೆದಿದ್ದರು. ಇಂದಿರಾ ಹತ್ತು ವರ್ಷ ವಯಸ್ಸಿನವರಾಗಿದ್ದರು ಮತ್ತು ಮಸ್ಸೂರಿಯ ಬೋರ್ಡಿಂಗ್ ಶಾಲೆಯಲ್ಲಿ ಓದುತ್ತಿದ್ದರು. ಅವರು ಆ ಪತ್ರಗಳಲ್ಲಿ ನೈಸರ್ಗಿಕ ಇತಿಹಾಸ ಮತ್ತು ನಾಗರೀಕತೆಗಳ ಕಥೆ ಬಗ್ಗೆ ಬೋಧಿಸಿದರು. ಈ ಪತ್ರಗಳ ಸಂಗ್ರಹವನ್ನು ‘ಲೆಟರ್ಸ್ ಫ್ರಮ್ ಎ ಫಾದರ್ ಟು ಹಿಸ್ ಡಾಟರ್ ‘ಎಂಬ ಪುಸ್ತಕವಾಗಿ ಪ್ರಕಟಿಸಲಾಯಿತು. ಪ್ರಶಸ್ತಿಗಳು 1955 ರಲ್ಲಿ, ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೆಹರು ಅವರಿಗೆ ನೀಡಲಾಯಿತು. ಪ್ರಧಾನ ಮಂತ್ರಿಯಿಂದ ಸಲಹೆ ಪಡೆಯದೆ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರು ನೆಹರು ಅವರಿಗೆ ನೀಡಿದರು. ಈ ಗೌರವ ಪ್ರದಾನ ಮಾಡಲು ಪ್ರಧಾನಿಯವರಿಂದ ಪಡೆಯಬೇಕಾಗಿದ್ದ ಸಾಮಾನ್ಯ ಸಾಂವಿಧಾನಿಕ ಕಾರ್ಯವಿಧಾನವನ್ನು ಅನುಸರಿಸಲಿಲ್ಲ. ಎಂದರೆ ನೆಹರು ಪ್ರಧಾನಿಯಾಗಿ ತಮಗೆ ತಾವೇ ನಾಗರಿಕ ಗೌರವ ಪಡೆಯಲು ಶಿಪಾರಸು ಮಾಡಿರಲಿಲ್ಲ. ವಿಶೇಷ ಅಧಿಕಾರದಲ್ಲಿ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರು ತಾವೇ ನಿರ್ಧರಿಸಿ ಆಗೌರವವನ್ನು ನೆಹರು ಅವರಿಗೆ ನೀಡಿದರು. [214] ನೆಹರೂ ಅವರ ಅಂತಿಮ ಕವನ/ಬಯಕೆ ಜವಾಹರಲಾಲ್‌ ನೆಹರೂ ಮೃತರಾದಾಗ ಅವರ ಪಕ್ಕದಲ್ಲಿ ಈ ಕವನದ ಸಾಲುಗಳನ್ನು ಗೀಚಿದ ಕಾಗದದ ತುಣುಕು ದೊರಕಿತ್ತು. ಕಾಡೂ ಸುಂದರವಾಗಿದೆ, ದಟ್ಟ ಕತ್ತಲೆಯಿಂದ ಕೂಡಿದೆ. ಆದರೆ, ನಾನು ಮಾತುಗಳನ್ನು ಉಳಿಸಿಕೊಳ್ಳಬೇಕಿದೆ. ನಿದ್ದೆಗೆ ಜಾರುವ ಮುನ್ನ ಮೈಲುಗಟ್ಟಲೆ ಕ್ರಮಿಸಬೇಕಿದೆ, ಮೈಲುಗಟ್ಟಲೆ ಕ್ರಮಿಸಬೇಕಿದೆ. (ಆಧಾರ:ಲೇಖಕಿ: ಪತ್ರಕರ್ತೆ ಹಾಗೂ ಮಾಧ್ಯಮ ಶಿಕ್ಷಣ ತಜ್ಞೆ) ಆರ್‌. ಅಖಿಲೇಶ್ವರಿ 03/08/2014/ ಪ್ರಜಾವಾಣಿ) ನೆಹರು ಪ್ರಧಾನಿಯಾಗಿದ್ದ ಅವಧಿಯ ಮುಖ್ಯ ಪದಾಧಿಕಾರಿಗಳು ನೋಡಿ ಭಾರತ ಗಣರಾಜ್ಯದ ಇತಿಹಾಸ ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ನೆಹರೂ, ಜವಾಹರಲಾಲ್ ಹೊರ ಸಂಪರ್ಕ (ಚರ್ಚೆ ಪುಟ ನೋಡಿ) ಗಾಂಧೀಜಿ ಚಿತ್ತ ನೆಹರೂ ಅವರತ್ತ ಸ್ಥಿರವಾಗಲು ಕಾರಣ ಏನು?ನೆಹರೂ-ಪಟೇಲ್: ಭಾರತ ರಥದ ಅಶ್ವದ್ವಯರು;ಸುಧೀಂದ್ರ ಬುಧ್ಯ: 16 ನವೆಂಬರ್ 2018, ಉಲ್ಲೇಖ ಭಾರತದ ಪ್ರಧಾನ ಮಂತ್ರಿಗಳು ಭಾರತ ರತ್ನ ಪುರಸ್ಕೃತರು ಭಾರತದ ಗಣ್ಯರು ಸ್ವಾತಂತ್ರ್ಯ ಹೋರಾಟಗಾರರು ಭಾರತೀಯ ಇತಿಹಾಸದ ಪ್ರಮುಖರು ೧೮೮೯ ಜನನ ೧೯೬೪ ನಿಧನ
1184
https://kn.wikipedia.org/wiki/%E0%B2%9C%E0%B2%BF%E0%B2%B2%E0%B3%8D%E0%B2%B2%E0%B3%86
ಜಿಲ್ಲೆ
ರಾಜ್ಯದ ಹಲವು ರಾಜಕೀಯ ವಿಭಾಗಗಳು ಹಾಗೂ ನಿರ್ವಹಣಾ ವಿಭಾಗಗಳಿಗೆ ಜಿಲ್ಲೆ ಎನ್ನುತ್ತಾರೆ. ಒಂದು ದೇಶವನ್ನು ಹಲವು ರಾಜ್ಯಗಳಾಗಿ ವಿಂಗಡಿಸಿದರೆ, ಒಂದು ರಾಜ್ಯವನ್ನು ಹಲವು ಜಿಲ್ಲೆಗಳಾಗಿ ವಿಂಗಡಿಸಲಾಗುತ್ತದೆ. ಆಡಳಿತ ವಿಕೇಂದ್ರೀಕರಣ, ಭೌಗೋಳಿಕ, ಭಾಷಿಕ ಮೊದಲಾದ ಅಂಶಗಳಿಗನುಗುಣವಾಗಿ, ಜಿಲ್ಲೆಗಳ ವಿಂಗಡಣೆ ನಡೆಯುತ್ತದೆ. ಒಂದು ಜಿಲ್ಲೆಯ ಭಾಗಗಳಾಗಿ ಅನೇಕ ತಾಲೂಕುಗಳು ಇರುತ್ತವೆ.<ref></ರಾಜ್ಯದ ಹಲವು ರಾಜಕೀಯ ವಿಭಾಗಗಳು ಹಾಗೂ ನಿರ್ವಹಣಾ ವಿಭಾಗಗಳಿಗೆ ಜಿಲ್ಲೆ ಎನ್ನುತ್ತಾರೆ. ಒಂದು ದೇಶವನ್ನು ಹಲವು ರಾಜ್ಯಗಳಾಗಿ ವಿಂಗಡಿಸಿದರೆ, ಒಂದು ರಾಜ್ಯವನ್ನು ಹಲವು ಜಿಲ್ಲೆಗಳಾಗಿ ವಿಂಗಡಿಸಲಾಗುತ್ತದೆ. ಆಡಳಿತ ವಿಕೇಂದ್ರೀಕರಣ, ಭೌಗೋಳಿಕ, ಭಾಷಿಕ ಮೊದಲಾದ ಅಂಶಗಳಿಗನುಗುಣವಾಗಿ, ಜಿಲ್ಲೆಗಳ ವಿಂಗಡಣೆ ನಡೆಯುತ್ತದೆ. ಒಂದು ಜಿಲ್ಲೆಯ ಭಾಗಗಳಾಗಿ ಅನೇಕ ತಾಲೂಕುಗಳು ಇರುತ್ತವೆ. ಕರ್ನಾಟಕದ ಹಲವು ಜಿಲ್ಲೆಗಳು ಲೇಖನ ಕರ್ನಾಟಕದ ಜಿಲ್ಲೆಗಳು ನೋಡಿ ಉಲ್ಲೇಖಗಳು ನಾಮಪದಗಳು ಆಡಳಿತ ವಿಭಾಗಗಳು
1185
https://kn.wikipedia.org/wiki/%E0%B2%85%E0%B2%95%E0%B3%8D%E0%B2%9F%E0%B3%8B%E0%B2%AC%E0%B2%B0%E0%B3%8D
ಅಕ್ಟೋಬರ್
ಅಕ್ಟೋಬರ್ ಜೂಲಿಯನ್ ಮತ್ತು ಗ್ರೆಗೋರಿಯನ್ ಕ್ಯಾಲೆಂಡರ್‌ಗಳಲ್ಲಿ ವರ್ಷದ ಹತ್ತನೇ ತಿಂಗಳು ಮತ್ತು ೩೧ ದಿನಗಳ ಉದ್ದವನ್ನು ಹೊಂದಿರುವ ಏಳು ತಿಂಗಳುಗಳಲ್ಲಿ ಆರನೇ ತಿಂಗಳು. ರೊಮುಲಸ್‌ನ ಹಳೆಯ ಕ್ಯಾಲೆಂಡರ್‌ನಲ್ಲಿ ಎಂಟನೇ ತಿಂಗಳು , ಅಕ್ಟೋಬರ್ ತನ್ನ ಹೆಸರನ್ನು ಈ ರೀತಿ ಬಳಸಿಕೊಂಡಿದೆ ( ಲ್ಯಾಟಿನ್ ಮತ್ತು ಗ್ರೀಕ್ನಿಂದ ôctō ಅಂದರೆ "ಎಂಟು"). ಜನವರಿ ಮತ್ತು ಫೆಬ್ರವರಿ ನಂತರ ಮೂಲತಃ ರೋಮನ್ನರು ರಚಿಸಿದ ಕ್ಯಾಲೆಂಡರ್‌ಗೆ ಸೇರಿಸಲಾಯಿತು. ಪ್ರಾಚೀನ ರೋಮ್‌ನಲ್ಲಿ, ಮೂರು ಮುಂಡಸ್ ಪ್ಯಾಟೆಟ್‌ಗಳಲ್ಲಿ ಒಂದು ಅಕ್ಟೋಬರ್ ೫ ರಂದು, ಮೆಡಿಟ್ರಿನಾಲಿಯಾ ಅಕ್ಟೋಬರ್ ೧೧, ಅಗಸ್ಟಾಲಿಯಾ ಅಕ್ಟೋಬರ್ ೧೨ ರಂದು, ಅಕ್ಟೋಬರ್ ಹಾರ್ಸ್ ಅಕ್ಟೋಬರ್ ೧೫ ರಂದು ಮತ್ತು ಆರ್ಮಿಲುಸ್ಟ್ರಿಯಮ್ ಅಕ್ಟೋಬರ್ ೧೯ ರಂದು ನಡೆಯುತ್ತದೆ. ಈ ದಿನಾಂಕಗಳು ಆಧುನಿಕ ಗ್ರೆಗೋರಿಯನ್ ಕ್ಯಾಲೆಂಡರ್‌ಗೆ ಹೊಂದಿಕೆಯಾಗುವುದಿಲ್ಲ. ಆಂಗ್ಲೋ-ಸ್ಯಾಕ್ಸನ್‌ಗಳಲ್ಲಿ, ಇದನ್ನು ವಿಂಟರ್‌ಫೈಲ್ಲೆತ್ ಎಂದು ಕರೆಯಲಾಗುತ್ತಿತ್ತು. ಏಕೆಂದರೆ ಈ ಹುಣ್ಣಿಮೆಯಲ್ಲಿ ಚಳಿಗಾಲವು ಪ್ರಾರಂಭವಾಗಬೇಕಿತ್ತು. ಅಕ್ಟೋಬರ್ ಸಾಮಾನ್ಯವಾಗಿ ದಕ್ಷಿಣ ಗೋಳಾರ್ಧದ ಕೆಲವು ಭಾಗಗಳಲ್ಲಿ ವಸಂತ ಋತುವಿನೊಂದಿಗೆ ಸಂಬಂಧಿಸಿದೆ ಮತ್ತು ಉತ್ತರ ಗೋಳಾರ್ಧದ ಕೆಲವು ಭಾಗಗಳಲ್ಲಿ ಶರತ್ಕಾಲದ ಋತುವಿನೊಂದಿಗೆ ಸಂಬಂಧಿಸಿದೆ. ಅಲ್ಲಿ ಇದು ದಕ್ಷಿಣ ಗೋಳಾರ್ಧದಲ್ಲಿ ಏಪ್ರಿಲ್‌ಗೆ ಸಮನಾದ ಋತುಮಾನವಾಗಿದೆ. ಚಿಹ್ನೆಗಳು ಅಕ್ಟೋಬರ್‌ನ ಜನ್ಮಗಲ್ಲುಗಳು ಟೂರ್‌ಮ್ಯಾಲಿನ್ ಮತ್ತು ಓಪಲ್. ಇದರ ಜನ್ಮ ಹೂವು ಕ್ಯಾಲೆಡುಲ. ರಾಶಿಚಕ್ರ ಚಿಹ್ನೆಗಳು ತುಲಾ (ಅಕ್ಟೋಬರ್ ೨೨ ರವರೆಗೆ) ಮತ್ತು ಸ್ಕಾರ್ಪಿಯೋ (ಅಕ್ಟೋಬರ್ ೨೩ ರಿಂದ). ಅಕ್ಟೋಬ್ರೆ ಎಂಬ ಫ್ರೆಂಚ್ ಪದವನ್ನು ೮ಬ್ರೆ ಎಂದು ಸಂಕ್ಷಿಪ್ತಗೊಳಿಸಲಾಗಿದೆ. ಆಚರಣೆಗಳು ಈ ಪಟ್ಟಿಯು ಅಧಿಕೃತ ಸ್ಥಿತಿ ಅಥವಾ ಸಾಮಾನ್ಯ ಆಚರಣೆಯನ್ನು ಸೂಚಿಸುವುದಿಲ್ಲ. ಗ್ರೆಗೋರಿಯನ್ ಅಲ್ಲದ: ೨೦೨೩ ದಿನಾಂಕಗಳು (ಎಲ್ಲಾ ಬಹಾಯಿ, ಇಸ್ಲಾಮಿಕ್ ಮತ್ತು ಯಹೂದಿ ಆಚರಣೆಗಳು ಪಟ್ಟಿ ಮಾಡಲಾದ ದಿನಾಂಕದ ಮೊದಲು ಸೂರ್ಯಾಸ್ತಮಾನದಲ್ಲಿ ಪ್ರಾರಂಭವಾಗುತ್ತವೆ ಮತ್ತು ಇಲ್ಲದಿದ್ದರೆ ಗಮನಿಸದ ಹೊರತು ಪ್ರಶ್ನಾರ್ಹ ದಿನಾಂಕದ ಸೂರ್ಯಾಸ್ತಮಾನದಲ್ಲಿ ಕೊನೆಗೊಳ್ಳುತ್ತವೆ. ) ಬಹಾಯಿ ಕ್ಯಾಲೆಂಡರ್‌ನಿಂದ ಹೊಂದಿಸಲಾದ ಆಚರಣೆಗಳ ಪಟ್ಟಿ. ಚೀನೀ ಕ್ಯಾಲೆಂಡರ್‌ನಿಂದ ಹೊಂದಿಸಲಾದ ಆಚರಣೆಗಳ ಪಟ್ಟಿ. ಹೀಬ್ರೂ ಕ್ಯಾಲೆಂಡರ್‌ನಿಂದ ಹೊಂದಿಸಲಾದ ಆಚರಣೆಗಳ ಪಟ್ಟಿ. ಇಸ್ಲಾಮಿಕ್ ಕ್ಯಾಲೆಂಡರ್ ನಿಗದಿಪಡಿಸಿದ ಆಚರಣೆಗಳ ಪಟ್ಟಿ. ಸೌರ ಹಿಜ್ರಿ ಕ್ಯಾಲೆಂಡರ್‌ನಿಂದ ಹೊಂದಿಸಲಾದ ಆಚರಣೆಗಳ ಪಟ್ಟಿ. ತಿಂಗಳ ಅವಧಿಯ ಯುನೈಟೆಡ್ ಕಿಂಗ್‌ಡಂನಲ್ಲಿ ಕಪ್ಪು ಇತಿಹಾಸದ ತಿಂಗಳು. ಕ್ಯಾಥೋಲಿಕ್ ಚರ್ಚ್ ಸಂಪ್ರದಾಯದಲ್ಲಿ, ಅಕ್ಟೋಬರ್ ಪವಿತ್ರ ರೋಸರಿಯ ತಿಂಗಳು. ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳು. ಆರೋಗ್ಯ ಸಾಕ್ಷರತಾ ತಿಂಗಳು. ಇಂಟರ್ನ್ಯಾಷನಲ್ ವಾಕ್ ಟು ಸ್ಕೂಲ್ ತಿಂಗಳು. ವೈದ್ಯಕೀಯ ಅಲ್ಟ್ರಾಸೌಂಡ್ ಜಾಗೃತಿ ತಿಂಗಳು. ರೆಟ್ ಸಿಂಡ್ರೋಮ್ ಜಾಗೃತಿ ತಿಂಗಳು. ವಿಶ್ವ ಅಂಧತ್ವ ಜಾಗೃತಿ ತಿಂಗಳು. ವಿಶ್ವ ಋತುಬಂಧ ತಿಂಗಳು. ಸಸ್ಯಾಹಾರಿ ಜಾಗೃತಿ ತಿಂಗಳು. ಯುನೈಟೆಡ್ ಸ್ಟೇಟ್ಸ್ ಅಕ್ಟೋಬರ್‌ನಲ್ಲಿ ಕೊನೆಯ ಎರಡರಿಂದ ಮೂರು ವಾರಗಳು (ಮತ್ತು, ಸಾಂದರ್ಭಿಕವಾಗಿ, ನವೆಂಬರ್‌ನ ಮೊದಲ ವಾರ) ಸಾಮಾನ್ಯವಾಗಿ ಯುಎಸ್ ಮತ್ತು ಕೆನಡಾದಲ್ಲಿನ ಎಲ್ಲಾ "ಬಿಗ್ ಫೋರ್" ಪ್ರಮುಖ ವೃತ್ತಿಪರ ಕ್ರೀಡಾ ಲೀಗ್‌ಗಳು ಪಂದ್ಯಗಳನ್ನು ನಿಗದಿಪಡಿಸುವ ವರ್ಷದ ಏಕೈಕ ಸಮಯವಾಗಿರುತ್ತದೆ. ನ್ಯಾಷನಲ್ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್ ತನ್ನ ಪೂರ್ವ ಋತುವನ್ನು ಪ್ರಾರಂಭಿಸುತ್ತದೆ ಮತ್ತು ಸುಮಾರು ಎರಡು ವಾರಗಳ ನಂತರ ನಿಯಮಿತ ಋತುವನ್ನು ಪ್ರಾರಂಭಿಸುತ್ತದೆ. ನ್ಯಾಷನಲ್ ಹಾಕಿ ಲೀಗ್ ಅದರ ನಿಯಮಿತ ಋತುವಿಗೆ ಸುಮಾರು ಒಂದು ತಿಂಗಳು. ನ್ಯಾಷನಲ್ ಫುಟ್‌ಬಾಲ್ ಲೀಗ್ ಅದರ ನಿಯಮಿತ ಋತುವಿನ ಅರ್ಧದಾರಿಯಲ್ಲೇ ಇದೆ ಮತ್ತು ಮೇಜರ್ ಲೀಗ್ ಬೇಸ್‌ಬಾಲ್ ಅದರ ನಂತರದ ಋತುವಿನಲ್ಲಿದೆ ಲೀಗ್ ಚಾಂಪಿಯನ್‌ಶಿಪ್ ಸರಣಿ ಮತ್ತು ವಿಶ್ವ ಸರಣಿಯೊಂದಿಗೆ. ೨೦೨೦ ರಲ್ಲಿ ಕೋವಿಡ್-೧೯ ಸಾಂಕ್ರಾಮಿಕ ರೋಗಕ್ಕೆ ಮುಂಚಿತವಾಗಿ, ಕ್ರೀಡಾ ಕ್ಯಾಲೆಂಡರ್‌ನಲ್ಲಿ ಬದಲಾವಣೆಗಳ ಅಗತ್ಯವಿತ್ತು ಮತ್ತು ನಾಲ್ಕು ಲೀಗ್‌ಗಳ ವೇಳಾಪಟ್ಟಿಗಳು ಸಾಮಾನ್ಯಕ್ಕಿಂತ ಹಿಂದಿನ ಮತ್ತು ಹೆಚ್ಚು ಆಗಾಗ್ಗೆ ಹೊಂದಿಕೆಯಾಗುವಂತೆ ಮಾಡಿತು. ಎಲ್ಲಾ ನಾಲ್ಕು ಲೀಗ್‌ಗಳು ಒಂದೇ ದಿನದಲ್ಲಿ ಆಟಗಳನ್ನು ಆಡಿದ ೧೯ ಸಂದರ್ಭಗಳಲ್ಲಿ (ಒಂದು ಈ ಘಟನೆಯನ್ನು ಜನಪ್ರಿಯವಾಗಿ ಕ್ರೀಡಾ ವಿಷುವತ್ ಸಂಕ್ರಾಂತಿ ಎಂದು ಕರೆಯಲಾಗುತ್ತದೆ). ಇವುಗಳಲ್ಲಿ ಇತ್ತೀಚಿನದು ಅಕ್ಟೋಬರ್ ೨೭, ೨೦೧೯ ರಂದು ನಡೆಯುತ್ತದೆ. ಹೆಚ್ಚುವರಿಯಾಗಿ, ಈ ಅವಧಿಯಲ್ಲಿ ಕೆನಡಿಯನ್ ಫುಟ್‌ಬಾಲ್ ಲೀಗ್ ವಿಶಿಷ್ಟವಾಗಿ ಅದರ ನಿಯಮಿತ ಋತುವಿನ ಅಂತ್ಯವನ್ನು ಸಮೀಪಿಸುತ್ತಿದೆ. ಆದರೆ ಮೇಜರ್ ಲೀಗ್ ಸಾಕರ್ ಎಮ್‌ಎಲ್‌ಎಸ್ ಕಪ್ ಪ್ಲೇಆಫ್‌ಗಳನ್ನು ಪ್ರಾರಂಭಿಸುತ್ತಿದೆ. ಅಮೇರಿಕನ್ ಆರ್ಕೈವ್ಸ್ ತಿಂಗಳು. ನ್ಯಾಶನಲ್ ಅಡಾಪ್ಟ್ ಎ ಶೆಲ್ಟರ್ ಡಾಗ್ ತಿಂಗಳು. ರಾಷ್ಟ್ರೀಯ ಕಲೆ ಮತ್ತು ಮಾನವಿಕ ತಿಂಗಳು. ರಾಷ್ಟ್ರೀಯ ಬೆದರಿಸುವ ತಡೆಗಟ್ಟುವಿಕೆ ತಿಂಗಳು. ರಾಷ್ಟ್ರೀಯ ಸೈಬರ್ ಭದ್ರತಾ ಜಾಗೃತಿ ತಿಂಗಳು. ರಾಷ್ಟ್ರೀಯ ಕೌಟುಂಬಿಕ ಹಿಂಸಾಚಾರ ಜಾಗೃತಿ ತಿಂಗಳು. ಫಿಲಿಪಿನೋ ಅಮೇರಿಕನ್ ಇತಿಹಾಸ ತಿಂಗಳು. ಇಟಾಲಿಯನ್-ಅಮೆರಿಕನ್ ಪರಂಪರೆ ಮತ್ತು ಸಂಸ್ಕೃತಿ ತಿಂಗಳು. ಪೋಲಿಷ್ ಅಮೇರಿಕನ್ ಹೆರಿಟೇಜ್ ತಿಂಗಳು. ರಾಷ್ಟ್ರೀಯ ಕೆಲಸ ಮತ್ತು ಕುಟುಂಬ ತಿಂಗಳು. ಯುನೈಟೆಡ್ ಸ್ಟೇಟ್ಸ್, ಆರೋಗ್ಯ ಸಂಬಂಧಿತ ಅಮೇರಿಕನ್ ಫಾರ್ಮಾಸಿಸ್ಟ್ ತಿಂಗಳು. ಅಕ್ಟೋಬರ್‌ನ ಎಲ್ಲಾ ಕುಬ್ಜತೆ/ಚಿಕ್ಕ ವ್ಯಕ್ತಿಗಳು/ಕಡಿಮೆ ಎತ್ತರ/ಅಸ್ಥಿಪಂಜರದ ಡಿಸ್ಪ್ಲಾಸಿಯಾ ಜಾಗೃತಿ. ಕುಬ್ಜತೆ/ಪುಟ್ಟ ಜನರ ಜಾಗೃತಿ ತಿಂಗಳು. ಎಸ್ಜಿಮಾ ಜಾಗೃತಿ ತಿಂಗಳು. ರಾಷ್ಟ್ರೀಯ ದಂತ ನೈರ್ಮಲ್ಯ ತಿಂಗಳು. ರಾಷ್ಟ್ರೀಯ ಆರೋಗ್ಯಕರ ಶ್ವಾಸಕೋಶದ ತಿಂಗಳು. ರಾಷ್ಟ್ರೀಯ ಬಂಜೆತನ ಜಾಗೃತಿ ತಿಂಗಳು. ಯಕೃತ್ತಿನ ಜಾಗೃತಿ ತಿಂಗಳು. ರಾಷ್ಟ್ರೀಯ ಲೂಪಸ್ ಎರಿಥೆಮಾಟೋಸಸ್ ಜಾಗೃತಿ ತಿಂಗಳು. ರಾಷ್ಟ್ರೀಯ ಭೌತಚಿಕಿತ್ಸೆಯ ತಿಂಗಳು . ರಾಷ್ಟ್ರೀಯ ಸ್ಪೈನಾ ಬಿಫಿಡಾ ಜಾಗೃತಿ ತಿಂಗಳು. ಹಠಾತ್ ಶಿಶು ಮರಣ ಸಿಂಡ್ರೋಮ್ ಜಾಗೃತಿ ತಿಂಗಳು (ಯುನೈಟೆಡ್ ಸ್ಟೇಟ್ಸ್). ಯುನೈಟೆಡ್ ಸ್ಟೇಟ್ಸ್, ಪಾಕಶಾಲೆ ರಾಷ್ಟ್ರೀಯ ಪಿಜ್ಜಾ ತಿಂಗಳು. ರಾಷ್ಟ್ರೀಯ ಪಾಪ್‌ಕಾರ್ನ್ ಪಾಪಿನ್ ತಿಂಗಳು. ರಾಷ್ಟ್ರೀಯ ಹಂದಿಮಾಂಸ ತಿಂಗಳು. ರಾಷ್ಟ್ರೀಯ ಸಮುದ್ರಾಹಾರ ತಿಂಗಳು. ಚಲಿಸಬಲ್ಲ, ೨೦೨೨ ದಿನಾಂಕಗಳು ಅಕ್ಟೋಬರ್‌ಫೆಸ್ಟ್ ಆಚರಣೆಗಳು (ಜಾಗತಿಕವಾಗಿ ಪ್ರದೇಶವನ್ನು ಆಧರಿಸಿ ಬದಲಾಗುತ್ತದೆ). ಖಗೋಳಶಾಸ್ತ್ರ ದಿನ : ಅಕ್ಟೋಬರ್ ೧ ವಿಶ್ವ ಸೆರೆಬ್ರಲ್ ಪಾಲ್ಸಿ ದಿನ : ಅಕ್ಟೋಬರ್ ೬ ವಿಶ್ವ ಕಾಲೇಜು ರೇಡಿಯೋ ದಿನ : ಅಕ್ಟೋಬರ್ ೭ ಭೂ ವಿಜ್ಞಾನ ವಾರ : ಅಕ್ಟೋಬರ್ ೯–೧೫. ಚಲಿಸಬಲ್ಲ ಪಾಶ್ಚಾತ್ಯ ಕ್ರಿಶ್ಚಿಯನ್ ಆಚರಣೆಗಳನ್ನೂ ನೋಡಿ. ಚಲಿಸಬಲ್ಲ ಪೂರ್ವ ಕ್ರಿಶ್ಚಿಯನ್ ಆಚರಣೆಗಳನ್ನು ಸಹ ನೋಡಿ. ಅಕ್ಟೋಬರ್ ೨ ವಿಪರೀತವಾದ (ಯುನೈಟೆಡ್ ಸ್ಟೇಟ್ಸ್). ಮೊದಲ ಭಾನುವಾರ: ಅಕ್ಟೋಬರ್ ೨ ಹಗಲು ಉಳಿಸುವ ಸಮಯ ಪ್ರಾರಂಭವಾಗುತ್ತದೆ (ಆಸ್ಟ್ರೇಲಿಯಾ). ತಂದೆಯ ದಿನ (ಲಕ್ಸೆಂಬರ್ಗ್). ಅಜ್ಜಿಯರ ದಿನ (ಕ್ವೀನ್ಸ್‌ಲ್ಯಾಂಡ್, ಆಸ್ಟ್ರೇಲಿಯಾ, ಯುನೈಟೆಡ್ ಕಿಂಗ್‌ಡಮ್). ಶಿಕ್ಷಕರ ದಿನ (ಬೆಲಾರಸ್, ಲಾಟ್ವಿಯಾ, ಉಕ್ರೇನ್). ಮೊದಲ ಪೂರ್ಣ ವಾರ: ಅಕ್ಟೋಬರ್ ೨–೮ ಅಲ್ಬುಕರ್ಕ್ ಇಂಟರ್ನ್ಯಾಷನಲ್ ಬಲೂನ್ ಫಿಯೆಸ್ಟಾ (ಯುನೈಟೆಡ್ ಸ್ಟೇಟ್ಸ್). ಮಾನಸಿಕ ಅಸ್ವಸ್ಥತೆಯ ಜಾಗೃತಿ ವಾರ (ಯುನೈಟೆಡ್ ಸ್ಟೇಟ್ಸ್). ಮೊದಲ ಸೋಮವಾರ: ಅಕ್ಟೋಬರ್ ೩ ಮಕ್ಕಳ ಆರೋಗ್ಯ ದಿನ (ಯುನೈಟೆಡ್ ಸ್ಟೇಟ್ಸ್). ಮಕ್ಕಳ ದಿನ (ಚಿಲಿ, ಸಿಂಗಾಪುರ). ಕಾರ್ಮಿಕರ ದಿನ (ಆಸ್ಟ್ರೇಲಿಯನ್ ಕ್ಯಾಪಿಟಲ್ ಟೆರಿಟರಿ, ನ್ಯೂ ಸೌತ್ ವೇಲ್ಸ್, ದಕ್ಷಿಣ ಆಸ್ಟ್ರೇಲಿಯಾ, ಕ್ವೀನ್ಸ್ಲ್ಯಾಂಡ್, ಆಸ್ಟ್ರೇಲಿಯಾ). ಪೀಟ್ ಕಟಿಂಗ್ ಸೋಮವಾರ (ಫಾಕ್ಲ್ಯಾಂಡ್ ದ್ವೀಪಗಳು). ಥ್ಯಾಂಕ್ಸ್ಗಿವಿಂಗ್ (ಸೇಂಟ್ ಲೂಸಿಯಾ). ವಿಶ್ವ ವಾಸ್ತುಶಿಲ್ಪ ದಿನ. ವಿಶ್ವ ಆವಾಸ ದಿನ. ಮೊದಲ ಮಂಗಳವಾರ: ಅಕ್ಟೋಬರ್ ೪ ನ್ಯಾಷನಲ್ ನೈಟ್ ಔಟ್ (ಫ್ಲೋರಿಡಾ ಮತ್ತು ಟೆಕ್ಸಾಸ್, ಯುನೈಟೆಡ್ ಸ್ಟೇಟ್ಸ್). ಮೊದಲ ಬುಧವಾರ: ಅಕ್ಟೋಬರ್ ೫ ಮಕ್ಕಳ ದಿನ (ಚಿಲಿ). ಮೊದಲ ಗುರುವಾರ: ಅಕ್ಟೋಬರ್ ೬ ರಾಷ್ಟ್ರೀಯ ಕಾವ್ಯ ದಿನ (ಯುಕೆ, ಐರ್ಲೆಂಡ್). ಮೊದಲ ಶುಕ್ರವಾರ: ಅಕ್ಟೋಬರ್ ೭ ಮಕ್ಕಳ ದಿನ (ಸಿಂಗಾಪೂರ್). ಲೀ ನ್ಯಾಷನಲ್ ಡೆನಿಮ್ ಡೇ (ಯುನೈಟೆಡ್ ಸ್ಟೇಟ್ಸ್). ವಿಶ್ವ ಸ್ಮೈಲ್ ಡೇ. ಎರಡನೇ ಶನಿವಾರ: ಅಕ್ಟೋಬರ್ ೮ ಅಂತರರಾಷ್ಟ್ರೀಯ ವಲಸೆ ಹಕ್ಕಿ ದಿನ (ಮೆಕ್ಸಿಕೋ, ಮಧ್ಯ ಮತ್ತು ದಕ್ಷಿಣ ಅಮೇರಿಕಾ, ಮತ್ತು ಕೆರಿಬಿಯನ್ ). ಮನೆ ಚಲನಚಿತ್ರ ದಿನ (ಅಂತರರಾಷ್ಟ್ರೀಯ ಆಚರಣೆ). ರಾಷ್ಟ್ರೀಯ ಮರ ನೆಡುವ ದಿನ (ಮಂಗೋಲಿಯಾ). ಎರಡನೇ ಭಾನುವಾರ: ಅಕ್ಟೋಬರ್ ೯ ರಾಷ್ಟ್ರೀಯ ಅಜ್ಜಿಯರ ದಿನ (ಜರ್ಮನಿ, ಹಾಂಗ್ ಕಾಂಗ್). ಅಕ್ಟೋಬರ್ ೯ ರ ವಾರ: ಅಕ್ಟೋಬರ್ ೯–೧೫ ಫೈರ್ ಪ್ರಿವೆನ್ಶನ್ ವೀಕ್ (ಕೆನಡಾ, ಯುನೈಟೆಡ್ ಸ್ಟೇಟ್ಸ್) ಅಗ್ನಿಶಾಮಕ ಸೇವೆ ಗುರುತಿಸುವಿಕೆ ದಿನ (ಕೆನಡಾ). ಅಗ್ನಿಶಾಮಕ ತಡೆಗಟ್ಟುವಿಕೆ ವಾರದ ಕೊನೆಯ ದಿನ: ಅಕ್ಟೋಬರ್ ೧೦. ಅಕ್ಟೋಬರ್ ೧೦ ರ ವಾರ: ಅಕ್ಟೋಬರ್ ೯–೧೫ ಫಿಜಿ ವೀಕ್ (ಫಿಜಿ). ಎರಡನೇ ಸೋಮವಾರ: ಅಕ್ಟೋಬರ್ ೧೦ ಕೊಲಂಬಸ್ ಡೇ (ಯುನೈಟೆಡ್ ಸ್ಟೇಟ್ಸ್). ಸ್ಥಳೀಯ ಜನರ ದಿನ (ಯುನೈಟೆಡ್ ಸ್ಟೇಟ್ಸ್‌ನ ಭಾಗಗಳು). ಸ್ಥಳೀಯ ಅಮೆರಿಕನ್ ದಿನ (ದಕ್ಷಿಣ ಡಕೋಟಾ, ಯುನೈಟೆಡ್ ಸ್ಟೇಟ್ಸ್). ಭ್ರಾತೃತ್ವ ದಿನ (ಅಲಬಾಮಾ, ಯುನೈಟೆಡ್ ಸ್ಟೇಟ್ಸ್). ಆರೋಗ್ಯ ಮತ್ತು ಕ್ರೀಡಾ ದಿನ (ಜಪಾನ್). ತಾಯಂದಿರ ದಿನ (ಮಲಾವಿ). ನಾರ್ಫೋಕ್ ದ್ವೀಪ ಕೃಷಿ ಪ್ರದರ್ಶನ ದಿನ (ನಾರ್ಫೋಕ್ ದ್ವೀಪ). ಥ್ಯಾಂಕ್ಸ್ಗಿವಿಂಗ್ (ಕೆನಡಾ). ರಾಷ್ಟ್ರೀಯ ದಿನ (ರಿಪಬ್ಲಿಕ್ ಆಫ್ ಚೀನಾ). ಎರಡನೇ ಮಂಗಳವಾರ: ಅಕ್ಟೋಬರ್ ೧೧ ಅದಾ ಲವ್ಲೇಸ್ ದಿನ ಎರಡನೇ ಬುಧವಾರ: ಅಕ್ಟೋಬರ್ ೧೨ ಬೆಲ್ಜಿಯಂ ಸಂಸತ್ತಿನ ನೀತಿ ಹೇಳಿಕೆ (ಬೆಲ್ಜಿಯಂ). ಅಕ್ಟೋಬರ್‌ನಲ್ಲಿ ಎರಡನೇ ಪೂರ್ಣ ವಾರದ ಬುಧವಾರ: ಅಕ್ಟೋಬರ್ ೧೨ ರಾಷ್ಟ್ರೀಯ ಪಳೆಯುಳಿಕೆ ದಿನ (ಯುನೈಟೆಡ್ ಸ್ಟೇಟ್ಸ್). ಎರಡನೇ ಗುರುವಾರ: ಅಕ್ಟೋಬರ್ ೧೩ ವಿಶ್ವ ದೃಷ್ಟಿ ದಿನ ಎರಡನೇ ಶುಕ್ರವಾರ: ಅಕ್ಟೋಬರ್ ೧೪ ಆರ್ಬರ್ ಡೇ (ನಮೀಬಿಯಾ). ವಿಶ್ವ ಮೊಟ್ಟೆ ದಿನ ಮೂರನೇ ಶನಿವಾರ: ಅಕ್ಟೋಬರ್ ೧೫ ಸ್ವೀಟೆಸ್ಟ್ ಡೇ (ಯುನೈಟೆಡ್ ಸ್ಟೇಟ್ಸ್). ಮೂರನೇ ಭಾನುವಾರ: ಅಕ್ಟೋಬರ್ ೧೬ ಶಿಕ್ಷಕರ ದಿನ (ಬ್ರೆಜಿಲ್). ತಾಯಿಯ ದಿನ (ಅರ್ಜೆಂಟೀನಾ). ಮೂರನೇ ಸೋಮವಾರ: ಅಕ್ಟೋಬರ್ ೧೭ ವೀರರ ದಿನ (ಜಮೈಕಾ). ತಾಯಿಯ ದಿನ (ಅರ್ಜೆಂಟೀನಾ). ನ್ಯಾನೊಮೊನೆಸ್ಟೊಟ್ಸೆ (ಸ್ಥಳೀಯ ಅಮೆರಿಕನ್ ಸಮುದಾಯಗಳು). ಬಾಸ್ ಡೇ (ಯುನೈಟೆಡ್ ಸ್ಟೇಟ್ಸ್, ಕೆನಡಾ, ಲಿಥುವೇನಿಯಾ ಮತ್ತು ರೊಮೇನಿಯಾ). ಮೂರನೇ ಗುರುವಾರ: ಅಕ್ಟೋಬರ್ ೨೦ ಅಂತರಾಷ್ಟ್ರೀಯ ಕ್ರೆಡಿಟ್ ಯೂನಿಯನ್ ದಿನ. ನಾಲ್ಕನೇ ಶನಿವಾರ: ಅಕ್ಟೋಬರ್ ೨೨ ಮಕ್ಕಳ ದಿನ (ಮಲೇಷ್ಯಾ). ಮೇಕ್ ಎ ಡಿಫರೆನ್ಸ್ ಡೇ (ಯುನೈಟೆಡ್ ಸ್ಟೇಟ್ಸ್). ನಾಲ್ಕನೇ ಬುಧವಾರದ ವಾರ: ಅಕ್ಟೋಬರ್ ೨೩–೨೯ ಮಕ್ಕಳ ವಾರ (ಆಸ್ಟ್ರೇಲಿಯಾ). ನಾಲ್ಕನೇ ಸೋಮವಾರ: ಅಕ್ಟೋಬರ್ ೨೪ ಕಾರ್ಮಿಕ ದಿನ (ನ್ಯೂಜಿಲೆಂಡ್). ನಾಲ್ಕನೇ ಬುಧವಾರ: ಅಕ್ಟೋಬರ್ ೨೬ ಮಕ್ಕಳ ದಿನ (ಆಸ್ಟ್ರೇಲಿಯಾ). ಕೊನೆಯ ಶುಕ್ರವಾರ: ಅಕ್ಟೋಬರ್ ೨೮ ರಾಷ್ಟ್ರೀಯ ಬಂದನ್ನ ದಿನ (ಆಸ್ಟ್ರೇಲಿಯಾ). ನೆವಾಡಾ ಡೇ (ನೆವಾಡಾ, ಯುನೈಟೆಡ್ ಸ್ಟೇಟ್ಸ್) (ಆದರೂ ರಾಜ್ಯವನ್ನು ಅಕ್ಟೋಬರ್ ೩೧, ೧೮೬೪ ರಂದು ಒಪ್ಪಿಕೊಳ್ಳಲಾಯಿತು). ಶಿಕ್ಷಕರ ದಿನ (ಆಸ್ಟ್ರೇಲಿಯಾ) (ಕೊನೆಯ ಶುಕ್ರವಾರ ಅಕ್ಟೋಬರ್ ೩೧ ರಂದು ಇದ್ದರೆ, ಈ ರಜಾದಿನವನ್ನು ನವೆಂಬರ್ ೭ ಕ್ಕೆ ವರ್ಗಾಯಿಸಲಾಗುತ್ತದೆ). ಕೊನೆಯ ಭಾನುವಾರ: ಅಕ್ಟೋಬರ್ ೩೦ ಯುರೋಪಿಯನ್ ಬೇಸಿಗೆ ಸಮಯ ಕೊನೆಗೊಳ್ಳುತ್ತದೆ. ಅಜ್ಜಿಯರ ದಿನ (ನ್ಯೂ ಸೌತ್ ವೇಲ್ಸ್, ಆಸ್ಟ್ರೇಲಿಯಾ). ಸ್ಜೆಕ್ಲಿ ಸ್ವಾಯತ್ತತೆ ದಿನ ( ರೊಮೇನಿಯಾ ). ಕೊನೆಯ ಸೋಮವಾರ: ಅಕ್ಟೋಬರ್ ೩೧ ಅಕ್ಟೋಬರ್ ಹಾಲಿಡೇ (ಐರ್ಲೆಂಡ್). ಸ್ಥಿರವಾಗಿದೆ. ವಿವಿಧ ಎರಿಕ್ ವಿಟಾಕ್ರೆ ಈ ತಿಂಗಳನ್ನು ಆಧರಿಸಿ ಅಕ್ಟೋಬರ್ ಎಂಬ ಶೀರ್ಷಿಕೆಯ ಒಂದು ಭಾಗವನ್ನು ರಚಿಸಿದ್ದಾರೆ. ನೀಲ್ ಗೈಮನ್ ತನ್ನ ೨೦೦೬ ರ ಫ್ರಾಗಿಲ್ ಥಿಂಗ್ಸ್ ಸಂಗ್ರಹಕ್ಕಾಗಿ "ಅಕ್ಟೋಬರ್ ಇನ್ ದಿ ಚೇರ್" ಎಂಬ ಶೀರ್ಷಿಕೆಯ ತಿಂಗಳನ್ನು ನಿರೂಪಿಸುವ ಕಥೆಯನ್ನು ಬರೆದರು. ರೇ ಬ್ರಾಡ್ಬರಿ ೧೯೫೫ ರಲ್ಲಿ ಅಕ್ಟೋಬರ್ ಕಂಟ್ರಿ ಎಂಬ ಸಣ್ಣ ಕಥೆಗಳ ಸಂಗ್ರಹವನ್ನು ಪ್ರಕಟಿಸಿದರು. ನಮಗೆ ಹೋಗುವ ಮೊದಲು ಅಕ್ಟೋಬರ್ ಡೋತ್ ಹಾಡು ವಸಂತಕಾಲದ ಪ್ರಗತಿಯನ್ನು ಆಚರಿಸುತ್ತದೆ (ದಕ್ಷಿಣ ಗೋಳಾರ್ಧದ ದೃಷ್ಟಿಕೋನದಿಂದ). ಉಲ್ಲೇಖಗಳು
1189
https://kn.wikipedia.org/wiki/%E0%B2%AD%E0%B2%BE%E0%B2%B0%E0%B2%A4%E0%B3%80%E0%B2%AF%20%E0%B2%AD%E0%B2%BE%E0%B2%B7%E0%B3%86%E0%B2%97%E0%B2%B3%E0%B3%81
ಭಾರತೀಯ ಭಾಷೆಗಳು
ಭಾರತ ಗಣರಾಜ್ಯದಲ್ಲಿ ಮಾತನಾಡುವ ಭಾಷೆಗಳು ಹಲವಾರು ಭಾಷಾ ಕುಟುಂಬಗಳಿಗೆ ಸೇರಿದ್ದು, ಪ್ರಮುಖವಾದವುಗಳು 78.05% ಭಾರತೀಯರು ಮಾತನಾಡುವ ಇಂಡೋ-ಆರ್ಯನ್ ಭಾಷೆಗಳು ಮತ್ತು 19.64% ಭಾರತೀಯರು ಮಾತನಾಡುವ ದ್ರಾವಿಡ ಭಾಷೆಗಳು, ಇವೆರಡೂ ಕುಟುಂಬಗಳು ಕೆಲವೊಮ್ಮೆ ಒಟ್ಟಿಗೆ ಇರುತ್ತವೆ. ಇವುಗಳನ್ನು ಭಾರತೀಯ ಭಾಷೆಗಳು ಎಂದು ಕರೆಯಲಾಗುತ್ತದೆ. ಜನಸಂಖ್ಯೆಯ ಉಳಿದ 2.31% ಜನರು ಮಾತನಾಡುವ ಭಾಷೆಗಳು ಆಸ್ಟ್ರೋಯಾಸಿಯಾಟಿಕ್, ಸಿನೋ-ಟಿಬೆಟಿಯನ್, ತೈ-ಕಡೈ ಮತ್ತು ಕೆಲವು ಇತರ ಸಣ್ಣ ಭಾಷಾ ಕುಟುಂಬಗಳು ಮತ್ತು ಪ್ರತ್ಯೇಕತೆಗಳಿಗೆ ಸೇರಿವೆ. ಪೀಪಲ್ಸ್ ಲಿಂಗ್ವಿಸ್ಟಿಕ್ ಸರ್ವೆ ಆಫ್ ಇಂಡಿಯಾದ ಪ್ರಕಾರ, ಭಾರತವು ಪಪುವಾ ನ್ಯೂಗಿನಿಯಾ (840) ನಂತರ ಅತಿ ಹೆಚ್ಚು ಭಾಷೆಗಳನ್ನು (780) ಹೊಂದಿದೆ. ಎಥ್ನೋಲಾಗ್ 456 ರ ಕಡಿಮೆ ಸಂಖ್ಯೆಯನ್ನು ಪಟ್ಟಿಮಾಡುತ್ತದೆ. ಭಾರತದ ಸಂವಿಧಾನದ 343 ನೇ ವಿಧಿಯು ಯೂನಿಯನ್‌ನ ಅಧಿಕೃತ ಭಾಷೆ ದೇವನಾಗರಿ ಲಿಪಿಯಲ್ಲಿ ಹಿಂದಿ ಎಂದು ಹೇಳುತ್ತದೆ, 1947 ರಿಂದ 15 ವರ್ಷಗಳ ಕಾಲ ಇಂಗ್ಲಿಷ್‌ನ ಅಧಿಕೃತ ಬಳಕೆ ಮುಂದುವರಿಯುತ್ತದೆ. ನಂತರ, ಸಾಂವಿಧಾನಿಕ ತಿದ್ದುಪಡಿ, ಅಧಿಕೃತ ಭಾಷೆಗಳ ಕಾಯಿದೆ, 1963 ರಲ್ಲಿ ಶಾಸನವನ್ನು ಬದಲಾಯಿಸಲು ನಿರ್ಧರಿಸುವವರೆಗೆ ಅನಿರ್ದಿಷ್ಟವಾಗಿ ಭಾರತ ಸರ್ಕಾರದಲ್ಲಿ ಹಿಂದಿಯೊಂದಿಗೆ ಇಂಗ್ಲಿಷ್ ಅನ್ನು ಮುಂದುವರಿಸಲು ಅವಕಾಶ ಮಾಡಿಕೊಟ್ಟಿತು. ಒಕ್ಕೂಟದ ಅಧಿಕೃತ ಉದ್ದೇಶಗಳಿಗಾಗಿ ಬಳಸಬೇಕಾದ ಅಂಕಿಗಳ ರೂಪವೆಂದರೆ "ಭಾರತೀಯ ಅಂಕಿಗಳ ಅಂತರರಾಷ್ಟ್ರೀಯ ರೂಪ", ಇವುಗಳನ್ನು ಹೆಚ್ಚಿನ ಇಂಗ್ಲಿಷ್-ಮಾತನಾಡುವ ದೇಶಗಳಲ್ಲಿ ಅರೇಬಿಕ್ ಅಂಕಿಗಳೆಂದು ಉಲ್ಲೇಖಿಸಲಾಗುತ್ತದೆ. ತಪ್ಪು ಕಲ್ಪನೆಗಳ ಹೊರತಾಗಿಯೂ, ಹಿಂದಿ ಭಾರತದ ರಾಷ್ಟ್ರೀಯ ಭಾಷೆಯಲ್ಲ; ಭಾರತದ ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷೆಯ ಸ್ಥಾನಮಾನವನ್ನು ನೀಡಿರುವುದಿಲ್ಲ. ಭಾರತೀಯ ಸಂವಿಧಾನದ ಎಂಟನೇ ಶೆಡ್ಯೂಲ್ 22 ಭಾಷೆಗಳನ್ನು ಪಟ್ಟಿ ಮಾಡುತ್ತದೆ, ಇವುಗಳನ್ನು ಅನುಸೂಚಿತ ಭಾಷೆಗಳು ಎಂದು ಉಲ್ಲೇಖಿಸಲಾಗಿದೆ ಮತ್ತು ಮಾನ್ಯತೆ, ಸ್ಥಾನಮಾನ ಮತ್ತು ಅಧಿಕೃತ ಪ್ರೋತ್ಸಾಹವನ್ನು ನೀಡಲಾಗಿದೆ. ಜೊತೆಗೆ, ಭಾರತ ಸರ್ಕಾರವು ಕನ್ನಡ, ಮಲಯಾಳಂ, ಒಡಿಯಾ, ಸಂಸ್ಕೃತ, ತಮಿಳು ಮತ್ತು ತೆಲುಗು ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ವಿಶಿಷ್ಟತೆಯನ್ನು ನೀಡಿದೆ. ಶ್ರೀಮಂತ ಪರಂಪರೆ ಮತ್ತು ಸ್ವತಂತ್ರ ಸ್ವಭಾವವನ್ನು ಹೊಂದಿರುವ ಭಾಷೆಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನವನ್ನು ನೀಡಲಾಗುತ್ತದೆ. 2001 ರ ಭಾರತದ ಜನಗಣತಿಯ ಪ್ರಕಾರ, ಭಾರತವು 122 ಪ್ರಮುಖ ಭಾಷೆಗಳನ್ನು ಮತ್ತು 1599 ಇತರ ಭಾಷೆಗಳನ್ನು ಹೊಂದಿತ್ತು. ಆದರೂ, ಇತರ ಮೂಲಗಳಿಂದ ಅಂಕಿಅಂಶಗಳು ಬದಲಾದರೂ, ಪ್ರಾಥಮಿಕವಾಗಿ "ಭಾಷೆ" ಮತ್ತು "ಉಪಭಾಷೆ" ಪದಗಳ ವ್ಯಾಖ್ಯಾನದಲ್ಲಿನ ವ್ಯತ್ಯಾಸಗಳಿಂದಾಗಿ 2001 ರ ಜನಗಣತಿಯು ಒಂದು ಮಿಲಿಯನ್‌ಗಿಂತಲೂ ಹೆಚ್ಚು ಸ್ಥಳೀಯ ಭಾಷಿಕರು ಮಾತನಾಡುವ 30 ಭಾಷೆಗಳನ್ನು ಮತ್ತು 10,000 ಕ್ಕಿಂತ ಹೆಚ್ಚು ಜನರು ಮಾತನಾಡುವ 122 ಭಾಷೆಗಳನ್ನು ದಾಖಲಿಸಿದೆ. ಭಾರತದ ಇತಿಹಾಸದಲ್ಲಿ ಎರಡು ಸಂಪರ್ಕ ಭಾಷೆಗಳು ಪ್ರಮುಖ ಪಾತ್ರವನ್ನು ವಹಿಸಿವೆ: ಒಂದು ಪರ್ಷಿಯನ್ ಮತ್ತು ಇನ್ನೊಂದು ಇಂಗ್ಲಿಷ್. ಭಾರತದಲ್ಲಿ ಮೊಘಲರ ಕಾಲದಲ್ಲಿ ಪರ್ಷಿಯನ್ ನ್ಯಾಯಾಲಯದ ಭಾಷೆಯಾಗಿತ್ತು. ಇದು ಬ್ರಿಟಿಷ್ ವಸಾಹತುಶಾಹಿ ಯುಗದವರೆಗೆ ಹಲವಾರು ಶತಮಾನಗಳವರೆಗೆ ಆಡಳಿತ ಭಾಷೆಯಾಗಿ ಆಳ್ವಿಕೆ ನಡೆಸಿತು. ಭಾರತದಲ್ಲಿ ಇಂಗ್ಲಿಷ್ ಪ್ರಮುಖ ಭಾಷೆಯಾಗಿ ಮುಂದುವರಿದಿದೆ. ಇದನ್ನು ಉನ್ನತ ಶಿಕ್ಷಣದಲ್ಲಿ ಮತ್ತು ಭಾರತ ಸರ್ಕಾರದ ಕೆಲವು ಕ್ಷೇತ್ರಗಳಲ್ಲಿ ಬಳಸಲಾಗುತ್ತದೆ. ಇಂದು ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಥಮ-ಭಾಷೆ ಮಾತನಾಡುವವರನ್ನು ಹೊಂದಿರುವ ಹಿಂದಿ, ಉತ್ತರ ಮತ್ತು ಮಧ್ಯ ಭಾರತದ ಬಹುಭಾಗದಾದ್ಯಂತ ಕಾರ್ಯನಿರ್ವಹಿಸುತ್ತದೆ. ಆದರೂ ದಕ್ಷಿಣ ಭಾರತದಲ್ಲಿ ಹಿಂದಿಯನ್ನು ಹೇರುವ ಬಗ್ಗೆ ಕಳವಳ ವ್ಯಕ್ತವಾಗಿದೆ, ಮುಖ್ಯವಾಗಿ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಹಾಗೆಯೇ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಅಸ್ಸಾಂ, ಪಂಜಾಬ್ ಮತ್ತು ಇತರ ಹಿಂದಿಯೇತರ ಪ್ರದೇಶಗಳಲ್ಲಿ ಹಿಂದಿಯ ಬಗ್ಗೆ ಕಳವಳ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಬೆಂಗಾಲಿಯು ಪೂರ್ವ ಮತ್ತು ಈಶಾನ್ಯ ಪ್ರದೇಶಗಳಲ್ಲಿ ಗಣನೀಯ ಪ್ರಮಾಣದ ಭಾಷಿಕರನ್ನು ಹೊಂದಿರುವ ದೇಶದ ಎರಡನೇ ಅತಿ ಹೆಚ್ಚು ಮಾತನಾಡುವ ಮತ್ತು ಅರ್ಥಮಾಡಿಕೊಳ್ಳುವ ಭಾಷೆಯಾಗಿದೆ. ದಕ್ಷಿಣ-ಪಶ್ಚಿಮ ಪ್ರದೇಶಗಳಲ್ಲಿ ಗಣನೀಯ ಪ್ರಮಾಣದ ಭಾಷಿಗರನ್ನು ಹೊಂದಿರುವ ಮರಾಠಿಯು ದೇಶದಲ್ಲಿ ಮೂರನೇ ಅತಿ ಹೆಚ್ಚು ಮಾತನಾಡುವ ಮತ್ತು ಅರ್ಥಮಾಡಿಕೊಳ್ಳುವ ಭಾಷೆಯಾಗಿದೆ. ಇತಿಹಾಸ ದಕ್ಷಿಣ ಭಾರತದ ಭಾಷೆಗಳು ದ್ರಾವಿಡ ಕುಟುಂಬದಿಂದ ಬಂದವು. ದ್ರಾವಿಡ ಭಾಷೆಗಳು ಭಾರತೀಯ ಉಪಖಂಡಕ್ಕೆ ಸ್ಥಳೀಯವಾಗಿವೆ. 4 ನೇ ಸಹಸ್ರಮಾನದ ಬಿಸಿಇ ನಲ್ಲಿ ಪ್ರೊಟೊ-ದ್ರಾವಿಡ ಭಾಷೆಗಳನ್ನು ಭಾರತದಲ್ಲಿ ಮಾತನಾಡಲಾಯಿತು ಮತ್ತು 3 ನೇ ಸಹಸ್ರಮಾನ ಬಿಸಿಇ ಯಲ್ಲಿ ವಿವಿಧ ಶಾಖೆಗಳಾಗಿ ವಿಭಜನೆಯಾಗಲು ಪ್ರಾರಂಭಿಸಿತು. ದ್ರಾವಿಡ ಭಾಷೆಗಳನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಲಾಗಿದೆ: ಉತ್ತರ, ಮಧ್ಯ (ಕೊಲಾಮಿ-ಪರ್ಜಿ), ದಕ್ಷಿಣ-ಮಧ್ಯ (ತೆಲುಗು-ಕುಯಿ), ಮತ್ತು ದಕ್ಷಿಣ ದ್ರಾವಿಡ (ತಮಿಳು-ಕನ್ನಡ). ಇಂಡೋ- ಯುರೋಪಿಯನ್ ಕುಟುಂಬದ ಇಂಡೋ-ಆರ್ಯನ್ ಶಾಖೆಯಿಂದ ಉತ್ತರ ಭಾರತೀಯ ಭಾಷೆಗಳು ಹಳೆಯ ಇಂಡೋ-ಆರ್ಯನ್‌ನಿಂದ ಮಧ್ಯ ಇಂಡೋ-ಆರ್ಯನ್ ಪ್ರಾಕೃತ ಭಾಷೆಗಳು ಮತ್ತು ಮಧ್ಯಯುಗದ ಅಪಭ್ರಂಶದ ಮೂಲಕ ವಿಕಸನಗೊಂಡಿವೆ. ಇಂಡೋ-ಆರ್ಯನ್ ಭಾಷೆಗಳು ಮೂರು ಹಂತಗಳಲ್ಲಿ ಅಭಿವೃದ್ಧಿ ಹೊಂದಿದವು ಮತ್ತು ಹೊರಹೊಮ್ಮಿದವು - ಹಳೆಯ ಇಂಡೋ-ಆರ್ಯನ್ (1500 ಬಿಸಿಇನಿಂದ 600 ಬಿಸಿಇ), ಮಧ್ಯ ಇಂಡೋ-ಆರ್ಯನ್ ಹಂತ (600 ಬಿಸಿಇಮತ್ತು 1000 ಬಿಸಿಇ), ಮತ್ತು ಹೊಸ ಇಂಡೋ-ಆರ್ಯನ್ (1000 ಬಿಸಿಇಮತ್ತು 1300 ಬಿಸಿಇ ನಡುವೆ). ಆಧುನಿಕ ಉತ್ತರ ಭಾರತದ ಇಂಡೋ-ಆರ್ಯನ್ ಭಾಷೆಗಳು ಹೊಸ ಇಂಡೋ-ಆರ್ಯನ್ ಯುಗದಲ್ಲಿ ವಿಭಿನ್ನ, ಗುರುತಿಸಬಹುದಾದ ಭಾಷೆಗಳಾಗಿ ವಿಕಸನಗೊಂಡವು. ಈಶಾನ್ಯ ಭಾರತದಲ್ಲಿ, ಸಿನೋ-ಟಿಬೆಟಿಯನ್ ಭಾಷೆಗಳಲ್ಲಿ, ಮೈಟಿ ಭಾಷೆ (ಅಧಿಕೃತವಾಗಿ ಮಣಿಪುರಿ ಭಾಷೆ ಎಂದು ಕರೆಯಲ್ಪಡುತ್ತದೆ) ಮಣಿಪುರ ಸಾಮ್ರಾಜ್ಯದ ಆಸ್ಥಾನ ಭಾಷೆಯಾಗಿ (ಮೈಟಿ) ಮಣಿಪುರವನ್ನು ಭಾರತೀಯ ಗಣರಾಜ್ಯದ ಆಡಳಿತಕ್ಕೆ ವಿಲೀನಗೊಳಿಸುವ ಮೊದಲು ದರ್ಬಾರ್ ಅಧಿವೇಶನಗಳ ಮೊದಲು ಮತ್ತು ಸಮಯದಲ್ಲಿ ಇದನ್ನು ಗೌರವಿಸಲಾಯಿತು. ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಸುನೀತಿ ಕುಮಾರ್ ಚಟರ್ಜಿ ಸೇರಿದಂತೆ ಅತ್ಯಂತ ಶ್ರೇಷ್ಠ ವಿದ್ವಾಂಸರ ಪ್ರಕಾರ ಇದರ ಅಸ್ತಿತ್ವದ ಇತಿಹಾಸವು 1500 ರಿಂದ 2000 ವರ್ಷಗಳವರೆಗೆ ವ್ಯಾಪಿಸಿದೆ. ಒಂದು ಕಾಲದಲ್ಲಿ ಸ್ವತಂತ್ರವಾಗಿದ್ದ ಮಣಿಪುರದ "ಮಣಿಪುರ ರಾಜ್ಯ ಸಂವಿಧಾನದ ಕಾಯಿದೆ, 1947" ಪ್ರಕಾರ, ಮಣಿಪುರಿ ಮತ್ತು ಇಂಗ್ಲಿಷ್ ಅನ್ನು ಸಾಮ್ರಾಜ್ಯದ ಆಸ್ಥಾನ ಭಾಷೆಗಳಾಗಿ ಮಾಡಲಾಯಿತು (ಭಾರತೀಯ ಗಣರಾಜ್ಯಕ್ಕೆ ವಿಲೀನಗೊಳ್ಳುವ ಮೊದಲು). ಪರ್ಷಿಯನ್, ಅಥವಾ ಫಾರ್ಸಿ, ಘಜ್ನಾವಿಡ್ಸ್ ಮತ್ತು ಇತರ ತುರ್ಕೊ-ಆಫ್ಘಾನ್ ರಾಜವಂಶಗಳಿಂದ ನ್ಯಾಯಾಲಯದ ಭಾಷೆಯಾಗಿ ಭಾರತಕ್ಕೆ ತರಲಾಯಿತು. ಸಾಂಸ್ಕೃತಿಕವಾಗಿ ಪರ್ಷಿಯೀಕರಣಗೊಂಡ ಅವರು, ನಂತರದ ಮೊಘಲ್ ರಾಜವಂಶದ ( ಟರ್ಕೊ-ಮಂಗೋಲ್ ಮೂಲದ) ಸಂಯೋಜನೆಯೊಂದಿಗೆ, 500 ವರ್ಷಗಳಿಗೂ ಹೆಚ್ಚು ಕಾಲ ಈ ಪ್ರದೇಶದ ಕಲೆ, ಇತಿಹಾಸ ಮತ್ತು ಸಾಹಿತ್ಯದ ಮೇಲೆ ಪ್ರಭಾವ ಬೀರಿದರು, ಇದರ ಪರಿಣಾಮವಾಗಿ ಅನೇಕ ಭಾರತೀಯ ಭಾಷೆಗಳು ಮುಖ್ಯವಾಗಿ ಶಾಬ್ದಿಕವಾಗಿ ಪರ್ಷಿಯೀಕರಣಗೊಂಡವು. 1837 ರಲ್ಲಿ, ಬ್ರಿಟಿಷರು ಆಡಳಿತದ ಉದ್ದೇಶಗಳಿಗಾಗಿ ಪರ್ಸೋ-ಅರೇಬಿಕ್ ಲಿಪಿಯಲ್ಲಿ ಪರ್ಶಿಯನ್ ಮತ್ತು ಹಿಂದೂಸ್ತಾನಿಯನ್ನು ಪರ್ಸೋ-ಅರೇಬಿಕ್ ಲಿಪಿಯಲ್ಲಿ ಬದಲಾಯಿಸಿದರು ಮತ್ತು 19 ನೇ ಶತಮಾನದ ಹಿಂದಿ ಚಳುವಳಿಯು ಪರ್ಷಿಯನ್ ಶಬ್ದಕೋಶವನ್ನು ಸಂಸ್ಕೃತದ ವ್ಯುತ್ಪನ್ನಗಳೊಂದಿಗೆ ಬದಲಾಯಿಸಿತು ಮತ್ತು ಆಡಳಿತಾತ್ಮಕ ಉದ್ದೇಶಗಳಿಗಾಗಿ ಪರ್ಸೋ-ಅರೇಬಿಕ್ ಲಿಪಿಯ ಬಳಕೆಯನ್ನು ದೇವನಾಗರಿಯೊಂದಿಗೆ ಬದಲಾಯಿಸಿತು ಅಥವಾ ಪೂರಕವಾಗಿಸಿತು. ಉತ್ತರ ಭಾರತದ ಪ್ರತಿಯೊಂದು ಭಾಷೆಗಳು ವಿಭಿನ್ನ ಪ್ರಭಾವಗಳನ್ನು ಹೊಂದಿದ್ದವು. ಉದಾಹರಣೆಗೆ, ಹಿಂದೂಸ್ತಾನಿಯು ಸಂಸ್ಕೃತ, ಅರೇಬಿಕ್ ಮತ್ತು ಪರ್ಷಿಯನ್ ಭಾಷೆಗಳಿಂದ ಬಲವಾಗಿ ಪ್ರಭಾವಿತವಾಗಿತ್ತು. ಇದು ಹಿಂದೂಸ್ತಾನಿ ಭಾಷೆಯ ರೆಜಿಸ್ಟರ್‌ಗಳಾಗಿ ಆಧುನಿಕ ಸ್ಟ್ಯಾಂಡರ್ಡ್ ಹಿಂದಿ ಮತ್ತು ಮಾಡರ್ನ್ ಸ್ಟ್ಯಾಂಡರ್ಡ್ ಉರ್ದು ಹೊರಹೊಮ್ಮಲು ಕಾರಣವಾಯಿತು. ಮತ್ತೊಂದೆಡೆ ಬಾಂಗ್ಲಾ ತನ್ನ ಸಾಂಸ್ಕೃತಿಕ ಬೇರುಗಳನ್ನು ಉಳಿಸಿಕೊಂಡಿದೆ ಮತ್ತು ಪರ್ಷಿಯನ್, ಇಂಗ್ಲಿಷ್, ಫ್ರೆಂಚ್ ಮತ್ತು ಇತರ ವಿದೇಶಿ ಭಾಷೆಗಳ ಪದಗಳೊಂದಿಗೆ ತನ್ನ ಶಬ್ದಕೋಶವನ್ನು ಹೆಚ್ಚು ವಿಸ್ತರಿಸಿದೆ. ವಿವರಣಾ ಪಟ್ಟಿ ಭಾರತೀಯ ಉಪಖಂಡದಲ್ಲಿ ಭಾಷಾ ವೈವಿಧ್ಯತೆಯ ಮೊದಲ ಅಧಿಕೃತ ಸಮೀಕ್ಷೆಯನ್ನು ಸರ್ ಜಾರ್ಜ್ ಅಬ್ರಹಾಂ ಗ್ರಿಯರ್ಸನ್ 1898 ರಿಂದ 1928 ರವರೆಗೆ ನಡೆಸಿದರು. ಲಿಂಗ್ವಿಸ್ಟಿಕ್ ಸರ್ವೆ ಆಫ್ ಇಂಡಿಯಾ ಎಂಬ ಶೀರ್ಷಿಕೆಯಡಿ, ಇದು ಒಟ್ಟು 179 ಭಾಷೆಗಳು ಮತ್ತು 544 ಉಪಭಾಷೆಗಳನ್ನು ವರದಿ ಮಾಡಿದೆ. ಆದರೂ "ಉಪಭಾಷೆ" ಮತ್ತು "ಭಾಷೆ", ತರಬೇತಿ ಪಡೆಯದ ಸಿಬ್ಬಂದಿಗಳ ಬಳಕೆ ಮತ್ತು ಬರ್ಮಾ ಮತ್ತು ಮದ್ರಾಸ್‌ನ ಹಿಂದಿನ ಪ್ರಾಂತ್ಯಗಳಂತೆ ದಕ್ಷಿಣ ಭಾರತದ ದತ್ತಾಂಶವನ್ನು ಕಡಿಮೆ ವರದಿ ಮಾಡುವಲ್ಲಿನ ಅಸ್ಪಷ್ಟತೆಯಿಂದಾಗಿ ಫಲಿತಾಂಶಗಳು ತಿರುಚಿದವು. ಕೊಚ್ಚಿನ್, ಹೈದರಾಬಾದ್, ಮೈಸೂರು ಮತ್ತು ತಿರುವಾಂಕೂರ್ ರಾಜಪ್ರಭುತ್ವದ ರಾಜ್ಯಗಳನ್ನು ಸಮೀಕ್ಷೆಯಲ್ಲಿ ಸೇರಿಸಲಾಗಿಲ್ಲ. ವಿಭಿನ್ನ ಮೂಲಗಳು ವ್ಯಾಪಕವಾಗಿ ವಿಭಿನ್ನ ಅಂಕಿಅಂಶಗಳನ್ನು ನೀಡುತ್ತವೆ, ಪ್ರಾಥಮಿಕವಾಗಿ "ಭಾಷೆ" ಮತ್ತು "ಉಪಭಾಷೆ" ಪದಗಳನ್ನು ಹೇಗೆ ವ್ಯಾಖ್ಯಾನಿಸಲಾಗಿದೆ ಮತ್ತು ಗುಂಪು ಮಾಡಲಾಗಿದೆ ಎಂಬುದರ ಆಧಾರದ ಮೇಲೆ. ಕ್ರಿಶ್ಚಿಯನ್ ಸುವಾರ್ತಾಬೋಧಕ ಸಂಸ್ಥೆ ಎಸ್‍ಐಎಲ್ ಇಂಟರ್ನ್ಯಾಷನಲ್ ನಿರ್ಮಿಸಿದ ಎಥ್ನೋಲಾಗ್, ಭಾರತಕ್ಕೆ 461 ಭಾಷೆಗಳನ್ನು ಪಟ್ಟಿಮಾಡಿದೆ (ವಿಶ್ವದಾದ್ಯಂತ 6,912 ರಲ್ಲಿ), ಅವುಗಳಲ್ಲಿ 447 ಜೀವಂತವಾಗಿವೆ, ಆದರೆ 14 ಅಳಿವಿನಂಚಿನಲ್ಲಿವೆ. 447 ಜೀವಂತ ಭಾಷೆಗಳನ್ನು ಎಥ್ನೋಲಾಗ್‌ನಲ್ಲಿ ಈ ಕೆಳಗಿನಂತೆ ಉಪವರ್ಗೀಕರಿಸಲಾಗಿದೆ: ಸಾಂಸ್ಥಿಕ - 63 ಅಭಿವೃದ್ಧಿ ಹೊಂದುತ್ತಿರುವ - 130 ಹುರುಪಿನ – 187 ತೊಂದರೆಯ – 54 ಸಾಯುತ್ತಿರುವ - 13 ಭಾರತದಲ್ಲಿನ ಖಾಸಗಿ ಸ್ವಾಮ್ಯದ ಸಂಶೋಧನಾ ಸಂಸ್ಥೆಯಾದ ಪೀಪಲ್ಸ್ ಲಿಂಗ್ವಿಸ್ಟಿಕ್ ಸರ್ವೆ ಆಫ್ ಇಂಡಿಯಾ ತನ್ನ ರಾಷ್ಟ್ರವ್ಯಾಪಿ ಸಮೀಕ್ಷೆಯ ಸಮಯದಲ್ಲಿ ಭಾರತದಲ್ಲಿ 66 ಕ್ಕೂ ಹೆಚ್ಚು ವಿಭಿನ್ನ ಲಿಪಿಗಳನ್ನು ಮತ್ತು 780 ಕ್ಕೂ ಹೆಚ್ಚು ಭಾಷೆಗಳನ್ನು ದಾಖಲಿಸಿದೆ, ಇದು ಭಾರತದಲ್ಲಿನ ಅತಿದೊಡ್ಡ ಭಾಷಾ ಸಮೀಕ್ಷೆ ಎಂದು ಸಂಸ್ಥೆ ಹೇಳಿಕೊಂಡಿದೆ. ಭಾರತೀಯ ಮಾನವಶಾಸ್ತ್ರದ ಸಮೀಕ್ಷೆಯ ಪೀಪಲ್ ಆಫ್ ಇಂಡಿಯಾ (ಪಿಒಐ) ಯೋಜನೆಯು 5,633 ಭಾರತೀಯ ಸಮುದಾಯಗಳಿಂದ ಗುಂಪು ಸಂವಹನಕ್ಕಾಗಿ 325 ಭಾಷೆಗಳನ್ನು ಬಳಸುತ್ತದೆ ಎಂದು ವರದಿ ಮಾಡಿದೆ. ಭಾರತದ ಜನಗಣತಿ ಅಂಕಿಅಂಶಗಳು ಭಾರತದ ಜನಗಣತಿಯು ಭಾಷೆಗಳು ಮತ್ತು ಉಪಭಾಷೆಗಳಿಗೆ ಮಾತನಾಡುವವರ ಸಂಖ್ಯೆಗೆ ಸಂಬಂಧಿಸಿದಂತೆ ಡೇಟಾವನ್ನು ದಾಖಲಿಸುತ್ತದೆ ಮತ್ತು ಪ್ರಕಟಿಸುತ್ತದೆ. ಆದರೆ ತನ್ನದೇ ಆದ ವಿಶಿಷ್ಟ ಪರಿಭಾಷೆಯನ್ನು ಬಳಸುತ್ತದೆ, ಭಾಷೆ ಮತ್ತು ಮಾತೃಭಾಷೆಯ ನಡುವೆ ವ್ಯತ್ಯಾಸವನ್ನು ತೋರಿಸುತ್ತದೆ. ಪ್ರತಿಯೊಂದು ಭಾಷೆಯೊಳಗೆ ಮಾತೃಭಾಷೆಗಳನ್ನು ಗುಂಪು ಮಾಡಲಾಗಿದೆ. ಹೀಗೆ ವ್ಯಾಖ್ಯಾನಿಸಲಾದ ಹಲವು ಮಾತೃಭಾಷೆಗಳನ್ನು ಭಾಷಾ ಮಾನದಂಡಗಳ ಮೂಲಕ ಉಪಭಾಷೆಯ ಬದಲಿಗೆ ಭಾಷೆ ಎಂದು ಪರಿಗಣಿಸಬಹುದು. ಅಧಿಕೃತವಾಗಿ ಹಿಂದಿ ಭಾಷೆಯ ಅಡಿಯಲ್ಲಿ ಗುಂಪು ಮಾಡಲಾದ ಹತ್ತಾರು ಮಿಲಿಯನ್ ಭಾಷಿಕರನ್ನು ಹೊಂದಿರುವ ಅನೇಕ ಮಾತೃಭಾಷೆಗಳಿಗೆ ಇದು ವಿಶೇಷವಾಗಿ ಸತ್ಯವಾಗಿದೆ. 1951 ಜನಗಣತಿ ಪೂರ್ವ ಪಂಜಾಬ್, ಹಿಮಾಚಲ ಪ್ರದೇಶ, ದೆಹಲಿ, ಪೆಪ್ಸು ಮತ್ತು ಬಿಲಾಸ್‌ಪುರದಂತಹ ರಾಜ್ಯಗಳಲ್ಲಿ ಉದ್ದೇಶಪೂರ್ವಕವಾಗಿ ಸಲ್ಲಿಕೆಗಳನ್ನು ತಪ್ಪಾಗಿ ದಾಖಲಿಸಲಾಗಿದೆ ಎಂಬ ಕಾರಣದಿಂದಾಗಿ ಹಿಂದಿ, ಉರ್ದು ಮತ್ತು ಪಂಜಾಬಿಗೆ ಪ್ರತ್ಯೇಕ ಅಂಕಿಅಂಶಗಳನ್ನು ನೀಡಲಾಗಿಲ್ಲ. 1961 ಜನಗಣತಿ 1961 ರ ಜನಗಣತಿಯು 438,936,918 ಜನರು ಮಾತನಾಡುವ 1,652 ಮಾತೃಭಾಷೆಗಳನ್ನು ಗುರುತಿಸಿದೆ, ಜನಗಣತಿಯನ್ನು ನಡೆಸಿದಾಗ ಯಾವುದೇ ವ್ಯಕ್ತಿ ಮಾಡಿದ ಎಲ್ಲಾ ಘೋಷಣೆಗಳನ್ನು ಎಣಿಕೆ ಮಾಡಿದೆ. ಆದರೂ ಘೋಷಿಸುವ ವ್ಯಕ್ತಿಗಳು ಸಾಮಾನ್ಯವಾಗಿ ಅವರ ಉಪಭಾಷೆಗಳು, ಮತ್ತು ಉಪಭಾಷೆಗಳ ಸಮೂಹಗಳೊಂದಿಗೆ ಅಥವಾ ಜಾತಿಗಳು, ವೃತ್ತಿಗಳು, ಧರ್ಮಗಳು, ಪ್ರದೇಶಗಳು, ದೇಶಗಳು ಮತ್ತು ರಾಷ್ಟ್ರೀಯತೆಗಳೊಂದಿಗೆ ಭಾಷೆಗಳ ಹೆಸರುಗಳನ್ನು ಮಿಶ್ರಣ ಮಾಡುತ್ತಾರೆ. ಆದ್ದರಿಂದ ಪಟ್ಟಿಯು ಕೆಲವೇ ಕೆಲವು ಪ್ರತ್ಯೇಕ ಮಾತನಾಡುವ ಭಾಷೆಗಳನ್ನು ಮತ್ತು 530 ವರ್ಗೀಕರಿಸದ ಮಾತೃಭಾಷೆಗಳನ್ನು ಮತ್ತು 100 ಕ್ಕೂ ಹೆಚ್ಚು ಭಾಷಾವೈಶಿಷ್ಟ್ಯಗಳನ್ನು ಒಳಗೊಂಡಿದೆ, ಇವುಗಳಲ್ಲಿ "ಆಫ್ರಿಕನ್", "ಕೆನಡಿಯನ್" ಅಥವಾ "ಬೆಲ್ಜಿಯನ್" ನಂತಹ ಭಾಷಿಕವಾಗಿ ಅನಿರ್ದಿಷ್ಟ ಡೆಮೊನಿಮ್‌ಗಳು ಸೇರಿದಂತೆ ಭಾರತಕ್ಕೆ ಸ್ಥಳೀಯವಲ್ಲ. 1991 ಜನಗಣತಿ 1991 ರ ಜನಗಣತಿಯು 1,576 ವರ್ಗೀಕೃತ ಮಾತೃಭಾಷೆಗಳನ್ನು ಗುರುತಿಸಿದೆ. 1991 ರ ಜನಗಣತಿಯ ಪ್ರಕಾರ, 22 ಭಾಷೆಗಳು ಮಿಲಿಯನ್‌ಗಿಂತಲೂ ಹೆಚ್ಚು ಸ್ಥಳೀಯ ಭಾಷಿಕರು, 50 ಭಾಷೆಗಳು 100,000 ಕ್ಕಿಂತ ಹೆಚ್ಚು ಮತ್ತು 114 ಭಾಷೆಗಳು 10,000 ಕ್ಕಿಂತ ಹೆಚ್ಚು ಸ್ಥಳೀಯ ಭಾಷಿಕರನ್ನು ಹೊಂದಿದ್ದವು. ಉಳಿದವರು ಒಟ್ಟು 566,000 ಸ್ಥಳೀಯ ಭಾಷಿಕರು (1991 ರಲ್ಲಿ ಒಟ್ಟು 838 ಮಿಲಿಯನ್ ಭಾರತೀಯರಲ್ಲಿ). 2001 ಜನಗಣತಿ 2001 ರ ಜನಗಣತಿಯ ಪ್ರಕಾರ, 1635 ತರ್ಕಬದ್ಧ ಮಾತೃಭಾಷೆಗಳು, 234 ಗುರುತಿಸಬಹುದಾದ ಮಾತೃಭಾಷೆಗಳು ಮತ್ತು 22 ಪ್ರಮುಖ ಭಾಷೆಗಳಿವೆ. ಇವುಗಳಲ್ಲಿ, 29 ಭಾಷೆಗಳು ಮಿಲಿಯನ್‌ಗಿಂತಲೂ ಹೆಚ್ಚು ಮಾತೃಭಾಷೆಯನ್ನು ಹೊಂದಿವೆ, 60 ಭಾಷೆಗಳು 100,000 ಕ್ಕಿಂತ ಹೆಚ್ಚು ಮತ್ತು 122 ಭಾಷೆಗಳು 10,000 ಕ್ಕಿಂತ ಹೆಚ್ಚು ಸ್ಥಳೀಯ ಭಾಷಿಕರು ಹೊಂದಿವೆ. ಕೊಡವದಂತಹ ಕೆಲವು ಭಾಷೆಗಳು ಲಿಪಿಯನ್ನು ಹೊಂದಿಲ್ಲ ಆದರೆ ಕೂರ್ಗ್‌ನಲ್ಲಿ (ಕೊಡಗು) ಸ್ಥಳೀಯ ಭಾಷಿಕರ ಗುಂಪನ್ನು ಹೊಂದಿವೆ. 2011 ರ ಜನಗಣತಿ 2011 ರ ಇತ್ತೀಚಿನ ಜನಗಣತಿಯ ಪ್ರಕಾರ, 19,569 ಕಚ್ಚಾ ಭಾಷಾ ಸಂಬಂಧಗಳ ಮೇಲೆ ಸಂಪೂರ್ಣ ಭಾಷಾಶಾಸ್ತ್ರದ ಪರಿಶೀಲನೆ, ಸಂಪಾದನೆ ಮತ್ತು ತರ್ಕಬದ್ಧಗೊಳಿಸುವಿಕೆಯ ನಂತರ, ಜನಗಣತಿಯು 1369 ತರ್ಕಬದ್ಧ ಮಾತೃಭಾಷೆಗಳನ್ನು ಮತ್ತು 1474 ಹೆಸರುಗಳನ್ನು 'ವರ್ಗೀಕರಿಸದ ಮಾತೃಭಾಷೆ' ಎಂದು ಪರಿಗಣಿಸಲಾಗಿದೆ. ಆ ಪೈಕಿ, 10,000 ಅಥವಾ ಅದಕ್ಕಿಂತ ಹೆಚ್ಚು ಮಾತನಾಡುವವರಿಂದ ಮಾತನಾಡುವ 1369 ತರ್ಕಬದ್ಧ ಮಾತೃಭಾಷೆಗಳು, ಒಟ್ಟು 121 ಭಾಷೆಗಳಿಗೆ ಕಾರಣವಾದ ಸೂಕ್ತ ಗುಂಪಿಗೆ ವರ್ಗೀಕರಿಸಲ್ಪಟ್ಟಿವೆ. ಈ 121 ಭಾಷೆಗಳಲ್ಲಿ, 22 ಈಗಾಗಲೇ ಭಾರತದ ಸಂವಿಧಾನದ ಎಂಟನೇ ಶೆಡ್ಯೂಲ್‌ನ ಭಾಗವಾಗಿದೆ ಮತ್ತು ಇತರ 99 ಅನ್ನು "ಒಟ್ಟು ಇತರ ಭಾಷೆಗಳು" ಎಂದು ಕರೆಯಲಾಗುತ್ತದೆ, ಇದು 2001 ರ ಜನಗಣತಿಯಲ್ಲಿ ಗುರುತಿಸಲಾದ ಇತರ ಭಾಷೆಗಳಿಗಿಂತ ಹತ್ತಿರದಲ್ಲಿದೆ. ಬಹುಭಾಷಿಕತೆ ಭಾರತದ 2011 ರ ಜನಗಣತಿ ವಿಶ್ವಾದ್ಯಂತದ ಎಥ್ನೋಲಾಗ್ (2019, 22 ನೇ ಆವೃತ್ತಿ) ಕೆಳಗಿನ ಕೋಷ್ಟಕವು 2019 ರ ಎಥ್ನೋಲಾಗ್ ಆವೃತ್ತಿಯಲ್ಲಿ ಕಂಡುಬರುವ ಭಾರತೀಯ ಉಪಖಂಡದ ಭಾಷೆಗಳ ಪಟ್ಟಿಯಾಗಿದ್ದು, ಇದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನೆಲೆಗೊಂಡಿರುವ ಎಸ್‌ಐಎಲ್ ಇಂಟರ್ನ್ಯಾಷನಲ್ ಪ್ರಕಟಿಸಿದ ಭಾಷಾ ಉಲ್ಲೇಖವಾಗಿದೆ. ಭಾಷಾ ಕುಟುಂಬಗಳು ಜನಾಂಗೀಯವಾಗಿ, ದಕ್ಷಿಣ ಏಷ್ಯಾದ ಭಾಷೆಗಳು, ಪ್ರದೇಶದ ಸಂಕೀರ್ಣ ಇತಿಹಾಸ ಮತ್ತು ಭೌಗೋಳಿಕತೆಯನ್ನು ಪ್ರತಿಧ್ವನಿಸುತ್ತವೆ, ಭಾಷಾ ಕುಟುಂಬಗಳು, ಭಾಷಾ ಫೈಲಾ ಮತ್ತು ಪ್ರತ್ಯೇಕತೆಗಳ ಸಂಕೀರ್ಣ ತೇಪೆಕೆಲಸವನ್ನು ರೂಪಿಸುತ್ತವೆ. ಭಾರತದಲ್ಲಿ ಮಾತನಾಡುವ ಭಾಷೆಗಳು ಹಲವಾರು ಭಾಷಾ ಕುಟುಂಬಗಳಿಗೆ ಸೇರಿವೆ, ಪ್ರಮುಖವಾದವುಗಳು 78.05% ಭಾರತೀಯರು ಮಾತನಾಡುವ ಇಂಡೋ-ಆರ್ಯನ್ ಭಾಷೆಗಳು ಮತ್ತು 19.64% ಭಾರತೀಯರು ಮಾತನಾಡುವ ದ್ರಾವಿಡ ಭಾಷೆಗಳು. ಮಾತನಾಡುವವರ ವಿಷಯದಲ್ಲಿ ಪ್ರಮುಖ ಭಾಷಾ ಕುಟುಂಬಗಳು: ಇಂಡೋ-ಆರ್ಯನ್ ಭಾಷಾ ಕುಟುಂಬ ಭಾರತದಲ್ಲಿ ಪ್ರತಿನಿಧಿಸುವ ಭಾಷಾ ಕುಟುಂಬಗಳಲ್ಲಿ ಯುರೋಪಿಯನ್ ಭಾಷಾ ಕುಟುಂಬದ ಅತಿ ದೊಡ್ಡದು, ಮಾತನಾಡುವವರ ವಿಷಯದಲ್ಲಿ, ಇಂಡೋ-ಆರ್ಯನ್ ಭಾಷಾ ಕುಟುಂಬ, ಇಂಡೋ-ಇರಾನಿಯನ್ ಕುಟುಂಬದ ಒಂದು ಶಾಖೆ, ಸ್ವತಃ ಇಂಡೋ- ಪೂರ್ವದ, ಅಸ್ತಿತ್ವದಲ್ಲಿರುವ ಉಪಕುಟುಂಬವಾಗಿದೆ. ಈ ಭಾಷಾ ಕುಟುಂಬವು ಪ್ರಾಬಲ್ಯ ಹೊಂದಿದ್ದು, ಸುಮಾರು 1035 ರಷ್ಟಿದೆ.  2018 ರ ಅಂದಾಜಿನ ಪ್ರಕಾರ ಮಿಲಿಯನ್ ಮಾತನಾಡುವವರು ಅಥವಾ ಜನಸಂಖ್ಯೆಯ 76.5 ಕ್ಕಿಂತ ಹೆಚ್ಚು. ಈ ಗುಂಪಿನಲ್ಲಿ ವ್ಯಾಪಕವಾಗಿ ಮಾತನಾಡುವ ಭಾಷೆಗಳು ಹಿಂದಿ, ಬೆಂಗಾಲಿ, ಮರಾಠಿ, ಉರ್ದು, ಗುಜರಾತಿ, ಪಂಜಾಬಿ, ಕಾಶ್ಮೀರಿ, ರಾಜಸ್ಥಾನಿ, ಸಿಂಧಿ, ಅಸ್ಸಾಮಿ (ಅಸಾಮಿಯಾ), ಮೈಥಿಲಿ ಮತ್ತು ಒಡಿಯಾ. ಇಂಡೋ-ಆರ್ಯನ್ ಭಾಷೆಗಳ ಹೊರತಾಗಿ, ಇತರ ಇಂಡೋ-ಯುರೋಪಿಯನ್ ಭಾಷೆಗಳನ್ನು ಸಹ ಭಾರತದಲ್ಲಿ ಮಾತನಾಡುತ್ತಾರೆ, ಅವುಗಳಲ್ಲಿ ಇಂಗ್ಲಿಷ್ ಪ್ರಮುಖ ಭಾಷೆಯಾಗಿದೆ. ದ್ರಾವಿಡ ಭಾಷಾ ಕುಟುಂಬ ಎರಡನೇ ಅತಿದೊಡ್ಡ ಭಾಷಾ ಕುಟುಂಬವೆಂದರೆ ದ್ರಾವಿಡ ಭಾಷಾ ಕುಟುಂಬ, ಇದು ಸುಮಾರು 277 ಮಿಲಿಯನ್ ಮಾತನಾಡುವವರನ್ನು ಹೊಂದಿದೆ, ಅಥವಾ 2018 ರ ಅಂದಾಜಿನ ಪ್ರಕಾರ ಸರಿಸುಮಾರು 20.5%. ದ್ರಾವಿಡ ಭಾಷೆಗಳಲ್ಲಿ ಮುಖ್ಯವಾಗಿ ದಕ್ಷಿಣ ಭಾರತ ಮತ್ತು ಪೂರ್ವ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಮತ್ತು ಈಶಾನ್ಯ ಶ್ರೀಲಂಕಾ, ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶದ ಭಾಗಗಳಲ್ಲಿ ಮಾತನಾಡುತ್ತಾರೆ. ಹೆಚ್ಚು ಮಾತನಾಡುವ ದ್ರಾವಿಡ ಭಾಷೆಗಳು ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ. ಮುಖ್ಯವಾಹಿನಿಯ ಜನಸಂಖ್ಯೆಯ ಜೊತೆಗೆ, ಓರಾನ್ ಮತ್ತು ಗೊಂಡ ಬುಡಕಟ್ಟುಗಳಂತಹ ಸಣ್ಣ ಪರಿಶಿಷ್ಟ ಬುಡಕಟ್ಟು ಸಮುದಾಯಗಳಿಂದ ದ್ರಾವಿಡ ಭಾಷೆಗಳನ್ನು ಮಾತನಾಡುತ್ತಾರೆ. ಕೇವಲ ಎರಡು ದ್ರಾವಿಡ ಭಾಷೆಗಳನ್ನು ಮಾತ್ರ ಭಾರತದ ಹೊರಗೆ ಮಾತನಾಡುತ್ತಾರೆ, ಬಲೂಚಿಸ್ತಾನ್, ಪಾಕಿಸ್ತಾನದಲ್ಲಿ ಬ್ರಾಹುಯಿ ಮತ್ತು ನೇಪಾಳದಲ್ಲಿ ಕುರುಖ್ ಉಪಭಾಷೆಯಾದ ಧಂಗರ್. ಆಸ್ಟ್ರೋಯಾಸಿಯಾಟಿಕ್ ಭಾಷಾ ಕುಟುಂಬ ಕಡಿಮೆ ಸಂಖ್ಯೆಯ ಭಾಷಿಕರನ್ನು ಹೊಂದಿರುವ ಕುಟುಂಬಗಳಲ್ಲಿ ಆಸ್ಟ್ರೋಯಾಸಿಯಾಟಿಕ್ ಮತ್ತು ಸಿನೋ-ಟಿಬೆಟಿಯನ್ ಭಾಷೆಗಳಾಗಿವೆ, ಒಟ್ಟು ಜನಸಂಖ್ಯೆಯ 3%. ಈ ಭಾಷೆಗಳನ್ನು ಅನುಕ್ರಮವಾಗಿ ಸುಮಾರು 10 ಮತ್ತು 6 ಮಿಲಿಯನ್ ಜನರು ಮಾತನಾಡುತ್ತಾರೆ. ಆಸ್ಟ್ರೋಯಾಸಿಯಾಟಿಕ್ ಭಾಷಾ ಕುಟುಂಬ ( ಆಸ್ಟ್ರೋ ಅರ್ಥ ದಕ್ಷಿಣ) ಆಗ್ನೇಯ ಏಷ್ಯಾದಲ್ಲಿ ಸ್ವ ನಿಯಂತ್ರಿ ಭಾಷೆಯಾಗಿದ್ದು, ಇದು ವಲಸೆಯ ಮೂಲಕ ಬಂತು. ಭೂಮಿಜ್ ಮತ್ತು ಸಂತಾಲಿ ಸೇರಿದಂತೆ ಖಾಸಿ ಮತ್ತು ಮುಂಡಾ ಭಾಷೆಗಳು ಭಾರತದ ಮುಖ್ಯ ಭೂಭಾಗದ ಆಸ್ಟ್ರೋಯಾಸಿಯಾಟಿಕ್ ಭಾಷೆಗಳಾಗಿವೆ. ನಿಕೋಬಾರ್ ದ್ವೀಪಗಳ ಭಾಷೆಗಳು ಸಹ ಈ ಭಾಷಾ ಕುಟುಂಬದ ಭಾಗವಾಗಿದೆ. ಖಾಸಿ ಮತ್ತು ಸಂತಾಲಿ ಹೊರತುಪಡಿಸಿ, ಭಾರತೀಯ ಭೂಪ್ರದೇಶದ ಎಲ್ಲಾ ಆಸ್ಟ್ರೋಯಾಸಿಯಾಟಿಕ್ ಭಾಷೆಗಳು ಅಳಿವಿನಂಚಿನಲ್ಲಿವೆ. ಟಿಬೆಟೋ-ಬರ್ಮನ್ ಭಾಷಾ ಕುಟುಂಬ ಟಿಬೆಟೋ-ಬರ್ಮನ್ ಭಾಷಾ ಕುಟುಂಬವು ಭಾರತದಲ್ಲಿ ಉತ್ತಮವಾಗಿ ಪ್ರತಿನಿಧಿಸಲ್ಪಟ್ಟಿದೆ. ಆದರೂ ಅವರ ಪರಸ್ಪರ ಸಂಬಂಧಗಳು ಸ್ಪಷ್ಟವಾಗಿಲ್ಲ, ಮತ್ತು ಕುಟುಂಬವನ್ನು ವಂಶವೃಕ್ಷದ ಸಾಂಪ್ರದಾಯಿಕ ರೂಪಕಕ್ಕಿಂತ ಹೆಚ್ಚಾಗಿ ಕಾಡಿನ ನೆಲದ ಮೇಲಿನ ಎಲೆಗಳ ತೇಪೆ ಎಂದು ವಿವರಿಸಲಾಗಿದೆ. ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಭಾರತೀಯ ಬಂಗಾಳಿ ವಿದ್ವಾಂಸ ಸುನೀತಿ ಕುಮಾರ್ ಚಟರ್ಜಿ ಅವರು, "ವಿವಿಧ ಟಿಬೆಟೋ-ಬರ್ಮನ್ ಭಾಷೆಗಳಲ್ಲಿ, ನೇವಾರಿಗಿಂತಲೂ ಅತ್ಯಂತ ಪ್ರಮುಖ ಮತ್ತು ಸಾಹಿತ್ಯದಲ್ಲಿ ಖಂಡಿತವಾಗಿಯೂ ಹೆಚ್ಚಿನ ಪ್ರಾಮುಖ್ಯತೆ ಇದೆ, ಇದು ಮೈತೆಯಿ ಅಥವಾ ಮಣಿಪುರಿ ಭಾಷೆಯಾಗಿದೆ ". ಭಾರತದಲ್ಲಿ, ಟಿಬೆಟೊ-ಬರ್ಮನ್ ಭಾಷೆಗಳನ್ನು ಅರುಣಾಚಲ ಪ್ರದೇಶ, ಅಸ್ಸಾಂ (ಬೆಟ್ಟಗಳು ಮತ್ತು ಸ್ವಾಯತ್ತ ಮಂಡಳಿಗಳು), ಹಿಮಾಚಲ ಪ್ರದೇಶ, ಲಡಾಖ್, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ಪ್ರದೇಶಗಳಲ್ಲಿ ಮತ್ತು ಹಿಮಾಲಯದಾದ್ಯಂತ ಮಾತನಾಡುತ್ತಾರೆ. ಭಾರತದಲ್ಲಿ ಮಾತನಾಡುವ ಸೈನೋ-ಟಿಬೆಟಿಯನ್ ಭಾಷೆಗಳು ಎರಡು ಸಾಂವಿಧಾನಿಕವಾಗಿ ಮಾನ್ಯತೆ ಪಡೆದ ಅಧಿಕೃತ ಭಾಷೆಗಳನ್ನು ಒಳಗೊಂಡಿವೆ, ಮೈತೆಯ್ (ಅಧಿಕೃತವಾಗಿ ಮಣಿಪುರಿ ಎಂದು ಕರೆಯಲಾಗುತ್ತದೆ) ಮತ್ತು ಬೋಡೋ ಮತ್ತು ಕರ್ಬಿ, ಲೆಪ್ಚಾ, ಮತ್ತು ಹಲವಾರು ಸಂಬಂಧಿತ ಟಿಬೆಟಿಕ್, ಪಶ್ಚಿಮ ಹಿಮಾಲಯ್, ತಾನಿ, ಬ್ರಹ್ಮಪುತ್ರನಂತಹ ಅನುಸೂಚಿತವಲ್ಲದ ಭಾಷೆಗಳು., ಅಂಗಾಮಿ-ಪೋಚುರಿ, ತಂಗ್ಖುಲ್, ಝೆಮ್, ಕುಕಿಶ್ ಉಪ ಭಾಷಾ ಶಾಖೆಗಳು, ಇರತ ಅನೇಕ ಭಾಷೆಗಳಿವೆ. ತೈ-ಕಡೈ ಭಾಷಾ ಕುಟುಂಬ ಅಹೋಮ್ ಭಾಷೆ, ನೈಋತ್ಯ ತೈ ಭಾಷೆ, ಒಂದು ಕಾಲದಲ್ಲಿ ಆಧುನಿಕ ಅಸ್ಸಾಂನಲ್ಲಿ ಅಹೋಮ್ ಸಾಮ್ರಾಜ್ಯದ ಪ್ರಬಲ ಭಾಷೆಯಾಗಿತ್ತು, ಆದರೆ ನಂತರ ಅಸ್ಸಾಮಿ ಭಾಷೆಯಿಂದ ಬದಲಾಯಿಸಲಾಯಿತು. (ಪ್ರಾಚೀನ ಯುಗದಲ್ಲಿ ಕಾಮ್ರೂಪಿ ಎಂದು ಕರೆಯಲಾಗುತ್ತಿತ್ತು ಇದು ಇಂದಿನ ಕಾಮರೂಪಿ ಉಪಭಾಷೆಯ ಪೂರ್ವ ರೂಪವಾಗಿದೆ) ಇತ್ತೀಚಿನ ದಿನಗಳಲ್ಲಿ, ಸಣ್ಣ ತೈ ಸಮುದಾಯಗಳು ಮತ್ತು ಅವರ ಭಾಷೆಗಳು ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾ-ಟಿಬೆಟಿಯನ್ನರೊಂದಿಗೆ ಉಳಿದಿವೆ. ಉದಾ: ಮ್ಯಾನ್ಮಾರ್‌ನ ಶಾನ್ ರಾಜ್ಯದ ಶಾನ್ ಭಾಷೆಯನ್ನು ಹೋಲುವ ತೈ ಫಾಕೆ, ತೈ ಐಟನ್ ಮತ್ತು ತೈ ಖಮ್ತಿ ; ಚೀನಾದ ಯುನ್ನಾನ್‌ನ ಡೈ ಭಾಷೆ ; ಲಾವೋಸ್‌ನ ಲಾವೋ ಭಾಷೆ ; ಥೈಲ್ಯಾಂಡ್‌ನ ಥಾಯ್ ಭಾಷೆ ; ಮತ್ತು ಚೀನಾದ ಗುವಾಂಗ್ಸಿಯಲ್ಲಿ ಝುವಾಂಗ್ ಭಾಷೆ . ಅಂಡಮಾನೀಸ್ ಭಾಷಾ ಕುಟುಂಬಗಳು ಅಂಡಮಾನ್ ದ್ವೀಪಗಳ ಭಾಷೆಗಳು ಮತ್ತೊಂದು ಗುಂಪನ್ನು ರೂಪಿಸುತ್ತವೆ: ಗ್ರೇಟ್ ಅಂಡಮಾನೀಸ್ ಭಾಷೆಗಳು, ಅಳಿವಿನಂಚಿನಲ್ಲಿರುವ ಹಲವಾರು ಮತ್ತು ಹೆಚ್ಚು ಅಳಿವಿನಂಚಿನಲ್ಲಿರುವ ಭಾಷೆ ಅಕಾ-ಜೆರುವನ್ನು ಒಳಗೊಂಡಿವೆ. ದಕ್ಷಿಣ ಅಂಡಮಾನ್ ದ್ವೀಪಗಳ ಒಂಗನ್ ಕುಟುಂಬವು ಎರಡು ಅಸ್ತಿತ್ವದಲ್ಲಿರುವ ಭಾಷೆಗಳನ್ನು ಒಳಗೊಂಡಿದೆ, ಒಂಗೆ ಮತ್ತು ಜರಾವಾ ಮತ್ತು ಒಂದು ಅಳಿವಿನಂಚಿನಲ್ಲಿರುವ ಭಾಷೆ, ಜಂಗಿಲ್ . ಇದರ ಜೊತೆಗೆ, ಸೆಂಟಿನೆಲೀಸ್ ಮೇಲಿನ ಭಾಷೆಗಳಿಗೆ ಸಂಬಂಧಿಸಿದೆ ಎಂದು ಭಾವಿಸಲಾಗಿದೆ. ಪರಿಗಣಿಸದ ಭಾಷೆ ಭಾರತೀಯ ಮುಖ್ಯಭೂಮಿಯಲ್ಲಿ ಕಂಡುಬರುವ ಏಕೈಕ ಭಾಷೆ ನಿಹಾಲಿ ಎಂದು ಪರಿಗಣಿಸಲಾಗಿದೆ. ನಿಹಾಲಿಯ ಸ್ಥಿತಿಯು ಅಸ್ಪಷ್ಟವಾಗಿದೆ, ಇದು ಒಂದು ವಿಶಿಷ್ಟವಾದ ಆಸ್ಟ್ರೋಯಾಸಿಯಾಟಿಕ್ ಭಾಷೆಯಾಗಿ, ಕೊರ್ಕು ಉಪಭಾಷೆಯಾಗಿ ಮತ್ತು ಕಾನೂನುಬದ್ಧ ಭಾಷೆಗಿಂತ "ಕಳ್ಳರ ಆರ್ಗೋಟ್" ಎಂದು ಪರಿಗಣಿಸಲ್ಪಟ್ಟಿದೆ. ದಕ್ಷಿಣ ಏಷ್ಯಾದ ಉಳಿದ ಭಾಗಗಳಲ್ಲಿ ಕಂಡುಬರುವ ಇತರ ಭಾಷಾ ಪ್ರತ್ಯೇಕತೆಗಳಲ್ಲಿ ಬುರುಶಾಸ್ಕಿ, ಗಿಲ್ಗಿಟ್-ಬಾಲ್ಟಿಸ್ತಾನ್ (ಪಾಕಿಸ್ತಾನದ ಆಡಳಿತ), ಕುಸುಂದ (ಪಶ್ಚಿಮ ನೇಪಾಳದಲ್ಲಿ) ಮತ್ತು ವೆಡ್ಡಾ (ಶ್ರೀಲಂಕಾದಲ್ಲಿ) ಸೇರಿವೆ. ಒಂದು ಭಾಷಾ ಕುಟುಂಬವಾಗಿ ಗ್ರೇಟ್ ಅಂಡಮಾನೀಸ್ ಭಾಷಾ ಗುಂಪಿನ ಸಿಂಧುತ್ವವನ್ನು ಪ್ರಶ್ನಿಸಲಾಗಿದೆ ಮತ್ತು ಕೆಲವು ಅಧಿಕಾರಿಗಳು ಅದನ್ನು ಪ್ರತ್ಯೇಕ ಭಾಷೆ ಎಂದು ಪರಿಗಣಿಸಿದ್ದಾರೆ. ಇದರ ಜೊತೆಗೆ, ಬಂಟು ಭಾಷೆ, ಸಿಡಿ, 20 ನೇ ಶತಮಾನದ ಮಧ್ಯಭಾಗದವರೆಗೆ ಗುಜರಾತ್‌ನಲ್ಲಿ ಸಿದ್ದಿಯರು ಮಾತನಾಡುತ್ತಿದ್ದರು. ಅಧಿಕೃತ ಭಾಷೆಗಳು ಸಂಯುಕ್ತ ಮಟ್ಟ ಸ್ವಾತಂತ್ರ್ಯದ ಮೊದಲು, ಬ್ರಿಟಿಷ್ ಭಾರತದಲ್ಲಿ, ಆಡಳಿತಾತ್ಮಕ ಉದ್ದೇಶಗಳಿಗಾಗಿ ಮತ್ತು ಉನ್ನತ ಶಿಕ್ಷಣ ಉದ್ದೇಶಗಳಿಗಾಗಿ ಇಂಗ್ಲಿಷ್ ಅನ್ನು ಏಕೈಕ ಭಾಷೆಯಾಗಿ ಬಳಸಲಾಗುತ್ತಿತ್ತು. 1946 ರಲ್ಲಿ, ಭಾರತದ ಸಂವಿಧಾನ ಸಭೆಯ ಕಲಾಪದಲ್ಲಿ ರಾಷ್ಟ್ರೀಯ ಭಾಷೆಯ ವಿಚಾರವು ವಿವಾದಿತ ವಿಷಯವಾಗಿತ್ತು, ನಿರ್ದಿಷ್ಟವಾಗಿ ಭಾರತದ ಸಂವಿಧಾನವನ್ನು ಬರೆಯಲಾದ ಭಾಷೆ ಮತ್ತು ಸಂಸತ್ತಿನ ಕಲಾಪಗಳ ಸಮಯದಲ್ಲಿ ಮಾತನಾಡುವ ಮತ್ತು ಅದಕ್ಕೆ ಅರ್ಹವಾದ "ರಾಷ್ಟ್ರೀಯ" ಎಂಬ ವಿಶೇಷಣದ ಭಾಷೆ ಯಾವುದು? ಭಾರತದ ಉತ್ತರ ಭಾಗಗಳಿಗೆ ಸೇರಿದ ಸದಸ್ಯರು ಸಂವಿಧಾನವನ್ನು ಇಂಗ್ಲಿಷ್‌ನಲ್ಲಿ ಅನಧಿಕೃತ ಅನುವಾದದೊಂದಿಗೆ ಹಿಂದಿಯಲ್ಲಿ ರಚಿಸಬೇಕೆಂದು ಒತ್ತಾಯಿಸಿದರು. ಸಾಂವಿಧಾನಿಕ ವಿಷಯಗಳ ಮೇಲೆ ಸೂಕ್ಷ್ಮವಾದ ಗದ್ಯವನ್ನು ರೂಪಿಸಲು ಇಂಗ್ಲಿಷ್ ಹೆಚ್ಚು ಉತ್ತಮವಾಗಿದೆ ಎಂಬ ಕಾರಣಕ್ಕಾಗಿ ಕರಡು ಸಮಿತಿಯು ಇದನ್ನು ಒಪ್ಪಲಿಲ್ಲ. ಹಿಂದಿಯನ್ನು ಅಗ್ರಮಾನ್ಯ ಭಾಷೆಯನ್ನಾಗಿ ಮಾಡುವ ಪ್ರಯತ್ನಗಳನ್ನು ಭಾರತದಲ್ಲಿ ಸ್ಥಳೀಯವಾಗಿ ಮಾತನಾಡದ ಭಾಗಗಳ ಸದಸ್ಯರು ಕಟುವಾಗಿ ವಿರೋಧಿಸಿದರು. ಅಂತಿಮವಾಗಿ, ರಾಷ್ಟ್ರೀಯ ಭಾಷೆಯ ಯಾವುದೇ ಉಲ್ಲೇಖವನ್ನು ಸೇರಿಸದಿರುವಂತೆ ರಾಜಿ ಮಾಡಿಕೊಂಡು ದೇವನಾಗರಿ ಲಿಪಿಯಲ್ಲಿ ಹಿಂದಿಯನ್ನು ಒಕ್ಕೂಟದ ಅಧಿಕೃತ ಭಾಷೆ ಎಂದು ಘೋಷಿಸಲಾಯಿತು. ಆದರೆ "ಸಂವಿಧಾನದ ಪ್ರಾರಂಭದ ಹದಿನೈದು ವರ್ಷಗಳವರೆಗೆ, ಒಕ್ಕೂಟದ ಎಲ್ಲಾ ಅಧಿಕೃತ ಉದ್ದೇಶಗಳಿಗಾಗಿ ಇಂಗ್ಲಿಷ್ ಭಾಷೆ ಬಳಸುವುದನ್ನು ಮುಂದುವರಿಸಲಾಯಿತು." ಭಾರತದ ಸಂವಿಧಾನದ 343 (1) ವಿಧಿಯಲ್ಲಿ "ಕೇಂದ್ರ ಸರ್ಕಾರದ ಅಧಿಕೃತ ಭಾಷೆಯು ದೇವನಾಗರಿ ಲಿಪಿಯ ಹಿಂದಿಯಾಗಿರಬೇಕು" ಎಂದು ಹೇಳಲಾಗಿದೆ.</ref>"Constitution of India as of 29 July 2008" (PDF). The Constitution Of India. Ministry of Law & Justice. Archived from the original (PDF) on 21 June 2014. Retrieved 13 April 2011. ಸಂಸತ್ತು ಬೇರೆ ರೀತಿಯಲ್ಲಿ ನಿರ್ಧರಿಸದ ಹೊರತು, ಸಂವಿಧಾನವು ಜಾರಿಗೆ ಬಂದ 15 ವರ್ಷಗಳ ನಂತರ ಎಲ್ಲಾ ಒಕ್ಕಟದ ಅಧಿಕೃತ ಉದ್ದೇಶಗಳಿಗಾಗಿ ಬಳಸಲಾದ ಇಂಗ್ಲಿಷ್ ಭಾಷೆಯನ್ನು ನ26 ಜನವರಿ 1965 ರಂದು ತಡೆ ಹಿಡಿಯಲಾಯಿತು. ಭಾಷೆಯ ಬದಲಾವಣೆಯ ದಿನಾಂಕವು ಸಮೀಪಿಸುತ್ತಿದ್ದಂತೆ, ಭಾರತದ ಹಿಂದಿ ಮಾತನಾಡದ ಪ್ರದೇಶಗಳಲ್ಲಿ, ವಿಶೇಷವಾಗಿ ಕೇರಳ, ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಪಂಜಾಬ್, ಪಶ್ಚಿಮ ಬಂಗಾಳ, ಕರ್ನಾಟಕ, ಪುದುಚೇರಿ ಮತ್ತು ಆಂಧ್ರಪ್ರದೇಶದಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ನೀಡಲಾಗಿತ್ತು. ಅದರಂತೆ, ಜವಾಹರಲಾಲ್ ನೆಹರು ಅವರು ಅಧಿಕೃತ ಭಾಷೆಗಳ ಕಾಯಿದೆ, 1963, ಜಾರಿಗೊಳಿಸುವುದನ್ನು ಖಚಿತಪಡಿಸಿದರು. ಇದರಿಂದಾಗಿ 1965 ರ ನಂತರವೂ ಅಧಿಕೃತ ಉದ್ದೇಶಗಳಿಗಾಗಿ ಹಿಂದಿಯೊಂದಿಗೆ ಇಂಗ್ಲಿಷ್ ಅನ್ನು ಇನ್ನೂ ಬಳಸಬಹುದೆಂಬ ಖಚಿತತೆಯನ್ನು ಒದಗಿಸಿತು. ಈ ಸಂದರ್ಭದಲ್ಲಿ, 1965 ಸಮೀಪಿಸುತ್ತಿದ್ದಂತೆ, ಭಾರತದ ಹೊಸ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು 26 ಜನವರಿ 1965 ರಿಂದ ಜಾರಿಗೆ ಬರುವಂತೆ ಹಿಂದಿಯನ್ನು ಪ್ರಧಾನವಾಗಿಸಲು ಸಿದ್ಧರಾದರು. ಇದು ತಮಿಳುನಾಡಿನಲ್ಲಿ ವ್ಯಾಪಕವಾದ ಆಂದೋಲನ, ಗಲಭೆಗಳು, ಸ್ವಯಂ ಅಗ್ನಿಸ್ಪರ್ಶ ಮತ್ತು ಆತ್ಮಹತ್ಯೆಗಳಿಗೆ ಕಾರಣವಾಯಿತು. ತಮ್ಮ ಪಕ್ಷದ ನಿಲುವಿನಿಂದ ದಕ್ಷಿಣದ ಕಾಂಗ್ರೆಸ್ ರಾಜಕಾರಣಿಗಳ ವಿಭಜನೆ, ದಕ್ಷಿಣದ ಇಬ್ಬರು ಕೇಂದ್ರ ಮಂತ್ರಿಗಳ ರಾಜೀನಾಮೆ ಮತ್ತು ದೇಶದ ಏಕತೆಗೆ ಹೆಚ್ಚುತ್ತಿರುವ ಬೆದರಿಕೆ ಶಾಸ್ತ್ರಿ ಅವರನ್ನು ಒಪ್ಪಿಕೊಳ್ಳುವಂತೆ ಮಾಡಿತು. ಇದರ ಪರಿಣಾಮವಾಗಿ, ಪ್ರಸ್ತಾವನೆಯನ್ನು ಕೈಬಿಡಲಾಯಿತು. 1967 ರಲ್ಲಿ ಕಾಯಿದೆಗೆ ತಿದ್ದುಪಡಿ ಮಾಡಿ, ಆ ಪರಿಣಾಮದ ನಿರ್ಣಯವನ್ನು ಪ್ರತಿ ರಾಜ್ಯದ ಶಾಸಕಾಂಗವು ಅಂಗೀಕರಿಸುವವರೆಗೆ ಇಂಗ್ಲಿಷ್ ಬಳಕೆಯನ್ನು ಕೊನೆಗೊಳಿಸುವುದಿಲ್ಲ ಎಂದು ತೀರ್ಮಾನಿಸಿತು. ಹಿಂದಿಯನ್ನು ತನ್ನ ಅಧಿಕೃತ ಭಾಷೆಯಾಗಿ ಮತ್ತು ಭಾರತೀಯ ಸಂಸತ್ತಿನ ಪ್ರತಿ ಸದನದಲ್ಲಿ ಅಳವಡಿಸಿಕೊಳ್ಳಲಿಲ್ಲ. ಭಾರತದ ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷೆಯ ಸ್ಥಾನಮಾನವನ್ನು ನೀಡಿಲ್ಲ. ಹಿಂದಿ 2001 ರ ಜನಗಣತಿಯಲ್ಲಿ, ಭಾರತದಲ್ಲಿ 422 ಮಿಲಿಯನ್ (422,048,642) ಜನರು ಹಿಂದಿಯನ್ನು ತಮ್ಮ ಸ್ಥಳೀಯ ಭಾಷೆ ಎಂದು ವರದಿ ಮಾಡಿದ್ದಾರೆ. ಈ ಅಂಕಿ ಅಂಶವು ಕೇವಲ ಹಿಂದೂಸ್ತಾನಿ ಹಿಂದಿ ಮಾತನಾಡುವವರನ್ನು ಒಳಗೊಂಡಿಲ್ಲ, ಆದರೆ ತಮ್ಮ ಭಾಷಣವನ್ನು ಹಿಂದಿ ಬೆಲ್ಟ್‌ನ ಉಪಭಾಷೆ ಎಂದು ಪರಿಗಣಿಸುವ ಸಂಬಂಧಿತ ಭಾಷೆಗಳ ಸ್ಥಳೀಯ ಭಾಷಿಕರು ಎಂದು ಗುರುತಿಸುವ ಜನರನ್ನು ಸಹ ಒಳಗೊಂಡಿದೆ. ಹಿಂದಿ (ಅಥವಾ ಹಿಂದೂಸ್ತಾನಿ) ದೆಹಲಿ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಚಂಡೀಗಢ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಹರಿಯಾಣ ಮತ್ತು ರಾಜಸ್ಥಾನಗಳಲ್ಲಿ ವಾಸಿಸುವ ಹೆಚ್ಚಿನ ಜನರ ಸ್ಥಳೀಯ ಭಾಷೆಯಾಗಿದೆ. "ಮಾಡರ್ನ್ ಸ್ಟ್ಯಾಂಡರ್ಡ್ ಹಿಂದಿ", ಪ್ರಮಾಣೀಕೃತ ಭಾಷೆಯು ಭಾರತದ ಒಕ್ಕೂಟದ ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. ಜೊತೆಗೆ, ಸಂಸತ್ತಿನಲ್ಲಿ ವ್ಯವಹಾರಕ್ಕಾಗಿ ಬಳಸುವ ಎರಡು ಭಾಷೆಗಳಲ್ಲಿ ಇದು ಒಂದಾಗಿದೆ. ಆದರೆ ರಾಜ್ಯಸಭೆಯು ಈಗ ಎಂಟನೇ ಶೆಡ್ಯೂಲ್‌ನಲ್ಲಿರುವ ಎಲ್ಲಾ 22 ಅಧಿಕೃತ ಭಾಷೆಗಳನ್ನು ಮಾತನಾಡಲು ಅನುಮತಿಸುತ್ತದೆ. ಹಿಂದೂಸ್ತಾನಿ, ಮೊಘಲ್ ಕಾಲದ ಪ್ರಮುಖ ಭಾಷೆಯಾದ ಖಾರಿ ಬೋಲಿ (खड़ी बोली) ಯಿಂದ ವಿಕಸನಗೊಂಡಿತು. ಇದು ಸ್ವತಃ ಅಪಭ್ರಂಶದಿಂದ ವಿಕಸನಗೊಂಡು ಪ್ರಾಕೃತದಿಂದ ಮಧ್ಯವರ್ತಿ ಪರಿವರ್ತನೆಯ ಹಂತವಾಗಿ ಉತ್ತರ ಭಾರತದ ಇಂಡೋ-ಆರ್ಯನ್ ಭಾಷೆಗಳೆಂದು ವಿಕಸನಗೊಂಡಿವೆ. ಭಾರತದಲ್ಲಿ ಮಾತನಾಡುವ ಹಿಂದಿಯ ವೈವಿಧ್ಯಗಳಲ್ಲಿ ರಾಜಸ್ಥಾನಿ, ಬ್ರಜ್ ಭಾಷಾ, ಹರ್ಯಾನ್ವಿ, ಬುಂದೇಲಿ, ಕನೌಜಿ, ಹಿಂದೂಸ್ತಾನಿ, ಅವಧಿ, ಬಾಘೇಲಿ ಮತ್ತು ಛತ್ತೀಸ್‌ಗಢಿ ಸೇರಿವೆ. ಆದರೆ ಸಂಪರ್ಕ ಭಾಷೆಯ ಕಾರಣದಿಂದ, ಹಿಂದಿ ಮುಂಬೈನಲ್ಲಿ ಬಂಬಯ್ಯ ಹಿಂದಿಯಂತಹ ಪ್ರಾದೇಶಿಕ ಉಪಭಾಷೆಗಳನ್ನು ಸಹ ಅಭಿವೃದ್ಧಿಪಡಿಸಿದೆ. ಇದರ ಜೊತೆಗೆ, ಅಂಡಮಾನ್ ಕ್ರಿಯೋಲ್ ಹಿಂದಿ ಕೂಡ ಅಂಡಮಾನ್ ದ್ವೀಪಗಳಲ್ಲಿ ವ್ಯಾಪಾರ ಭಾಷೆಯಾಗಿ ಅಭಿವೃದ್ಧಿಗೊಂಡಿದೆ. ಹಾಡುಗಳು ಮತ್ತು ಚಲನಚಿತ್ರಗಳಂತಹ ಜನಪ್ರಿಯ ಸಂಸ್ಕೃತಿಯಲ್ಲಿ ಬಳಸುವುದರಿಂದ, ಹಿಂದಿ ಉತ್ತರ ಮತ್ತು ಮಧ್ಯ ಭಾರತದಾದ್ಯಂತ ಸಂಪರ್ಕ ಭಾಷೆಯಾಗಿ ಕಾರ್ಯನಿರ್ವಹಿಸುತ್ತದೆ. ಹಿಂದಿಯನ್ನು ಪ್ರಾಥಮಿಕ ಭಾಷೆ, ಬೋಧನಾ ಭಾಷೆ ಮತ್ತು ಎರಡನೇ ಭಾಷೆಯಾಗಿ ವ್ಯಾಪಕವಾಗಿ ಹೆಚ್ಚಿನ ರಾಜ್ಯಗಳಲ್ಲಿ ಕಲಿಸಲಾಗುತ್ತದೆ. ಆಂಗ್ಲ   ಭಾರತದಲ್ಲಿ ಬ್ರಿಟಿಷ್ ವಸಾಹತುಶಾಹಿ ಆಡಳಿತ, ವ್ಯವಹಾರ ಮತ್ತು ಶಿಕ್ಷಣಕ್ಕಾಗಿ ಇಂಗ್ಲಿಷ್ ಭಾಷೆ ಮಾರ್ಪಟ್ಟಿತು. ಸಂಸತ್ತಿನಲ್ಲಿ ವ್ಯವಹಾರಕ್ಕಾಗಿ ಭಾರತದ ಸಂವಿಧಾನದಲ್ಲಿ ಅನುಮತಿಸಲಾದ ಎರಡು ಭಾಷೆಗಳಲ್ಲಿ ಹಿಂದಿ ಜೊತೆಗೆ ಇಂಗ್ಲಿಷ್ ಕೂಡ ಒಂದು. ಹಿಂದಿಯು ಅಧಿಕೃತ ಸರ್ಕಾರಿ ಪ್ರೋತ್ಸಾಹವನ್ನು ಹೊಂದಿದೆ ಮತ್ತು ಭಾರತದ ಹೆಚ್ಚಿನ ಭಾಗಗಳಲ್ಲಿ ಸಂಪರ್ಕ ಭಾಷೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಾಸ್ತವದ ಹೊರತಾಗಿಯೂ, ಭಾರತದ ದಕ್ಷಿಣ ರಾಜ್ಯಗಳಲ್ಲಿ ಹಿಂದಿಯ ಬಳಕೆಗೆ ಸಾಕಷ್ಟು ವಿರೋಧವಿತ್ತು ಮತ್ತು ಭಾರತದ ಇಂಗ್ಲಿಷ್ ಬಹುಪಾಲು ವಾಸ್ತವಿಕ ಸಂಪರ್ಕ ಭಾಷೆಯಾಗಿ ಹೊರಹೊಮ್ಮಿದೆ. ಪತ್ರಕರ್ತ ಮನು ಜೋಸೆಫ್, ದಿ ನ್ಯೂಯಾರ್ಕ್ ಟೈಮ್ಸ್‌ನಲ್ಲಿ 2011 ರ ಲೇಖನದಲ್ಲಿ, ಭಾಷೆಯ ಪ್ರಾಮುಖ್ಯತೆ ಮತ್ತು ಬಳಕೆ ಮತ್ತು ಇಂಗ್ಲಿಷ್-ಭಾಷೆಯ ಶಿಕ್ಷಣದ ಬಯಕೆಯಿಂದಾಗಿ, "ಇಂಗ್ಲಿಷ್ ಭಾರತದ ವಾಸ್ತವಿಕ ರಾಷ್ಟ್ರೀಯ ಭಾಷೆಯಾಗಿದೆ. ಇದು ಕಹಿ ಸತ್ಯ." ನಗರವಾಸಿಗಳು, ಶ್ರೀಮಂತ ಭಾರತೀಯರು, ಉನ್ನತ ಮಟ್ಟದ ಶೈಕ್ಷಣಿಕ ಸಾಧನೆ ಹೊಂದಿರುವ ಭಾರತೀಯರು, ಕ್ರಿಶ್ಚಿಯನ್ನರು, ಪುರುಷರು ಮತ್ತು ಕಿರಿಯ ಭಾರತೀಯರಲ್ಲಿ ಇಂಗ್ಲಿಷ್ ಭಾಷಾ ಪ್ರಾವೀಣ್ಯತೆಯು ಅತ್ಯಧಿಕವಾಗಿದೆ. 2017 ರಲ್ಲಿ, ಗ್ರಾಮೀಣ ಹದಿಹರೆಯದವರಲ್ಲಿ ಶೇಕಡಾ 58 ಕ್ಕಿಂತ ಹೆಚ್ಚು ಜನರು ಇಂಗ್ಲಿಷ್ ಅನ್ನು ಓದಬಲ್ಲರು ಮತ್ತು ಹದಿನಾಲ್ಕು ವರ್ಷ ವಯಸ್ಸಿನವರಲ್ಲಿ 53 ಪ್ರತಿಶತ ಮತ್ತು 18 ವರ್ಷ ವಯಸ್ಸಿನ ಅರುವತ್ತು ಪ್ರತಿಶತದಷ್ಟು ಜನರು ಇಂಗ್ಲಿಷ್ ವಾಕ್ಯಗಳನ್ನು ಓದಬಲ್ಲರು. ಪರಿಚ್ಛೇದ ಭಾಷೆಗಳು 1967 ರಲ್ಲಿ ಭಾರತದ ಸಂವಿಧಾನದ ಇಪ್ಪತ್ತೊಂದನೇ ತಿದ್ದುಪಡಿಯ ತನಕ, ದೇಶವು 14 ಅಧಿಕೃತ ಪ್ರಾದೇಶಿಕ ಭಾಷೆಗಳನ್ನು ಗುರುತಿಸಿತು. ಎಂಟನೇ ಪರಿಚ್ಛೇದ ಮತ್ತು ಎಪ್ಪತ್ತೊಂದನೇ ತಿದ್ದುಪಡಿಯು ಸಿಂಧಿ, ಕೊಂಕಣಿ, ಮೈತೆಯ್ ಮತ್ತು ನೇಪಾಳಿಗಳನ್ನು ಸೇರಿಸಲು ಅನುಮತಿಸಿತು. ಇದರಿಂದಾಗಿ ಭಾರತದ ಅಧಿಕೃತ ಪ್ರಾದೇಶಿಕ ಭಾಷೆಗಳ ಸಂಖ್ಯೆಯನ್ನು 18 ಕ್ಕೆ ಹೆಚ್ಚಿಸಲಾಯಿತು. 1 ಡಿಸೆಂಬರ್ 2007 ರಂತೆ ಭಾರತದ ಸಂವಿಧಾನದ ಎಂಟನೇ ಪರಿಚ್ಛೇದವು 22 ಭಾಷೆಗಳನ್ನು ಪಟ್ಟಿ ಮಾಡಿದೆ. ಅವುಗಳನ್ನು ಬಳಸಿದ ಪ್ರದೇಶಗಳೊಂದಿಗೆ ಕೆಳಗಿನ ಕೋಷ್ಟಕದಲ್ಲಿ ನೀಡಲಾಗಿದೆ. ಪ್ರತ್ಯೇಕ ರಾಜ್ಯಗಳು, ಅವುಗಳಲ್ಲಿ ಹೆಚ್ಚಿನವುಗಳ ಗಡಿಗಳು ಸಾಮಾಜಿಕ-ಭಾಷಾ ರೇಖೆಗಳ ಮೇಲೆ ಚಿತ್ರಿಸಲ್ಪಟ್ಟಿವೆ, ಅವುಗಳ ಭಾಷಾ ಜನಸಂಖ್ಯೆಯನ್ನು ಅವಲಂಬಿಸಿ ತಮ್ಮದೇ ಆದ ಅಧಿಕೃತ ಭಾಷೆಗಳ ಕಾನೂನುಗಳನ್ನು ಮಾಡಬಹುದಾಗಿದೆ. ಆಯ್ಕೆಮಾಡಿದ ಅಧಿಕೃತ ಭಾಷೆಗಳು ಆ ರಾಜ್ಯದಲ್ಲಿ ಮಾತನಾಡುವ ಪ್ರಧಾನ ಮತ್ತು ರಾಜಕೀಯ ಮಹತ್ವದ ಭಾಷೆಗಳನ್ನು ಪ್ರತಿಬಿಂಬಿಸುತ್ತವೆ. ಭಾಷಿಕವಾಗಿ ವ್ಯಾಖ್ಯಾನಿಸಲಾದ ಪ್ರದೇಶವನ್ನು ಹೊಂದಿರುವ ಕೆಲವು ರಾಜ್ಯಗಳು ಆ ರಾಜ್ಯದಲ್ಲಿ ಪ್ರಧಾನ ಭಾಷೆಯನ್ನು ಮಾತ್ರ ತನ್ನ ಅಧಿಕೃತ ಭಾಷೆಯಾಗಿ ಹೊಂದಿರಬಹುದು, ಉದಾಹರಣೆಗೆ ಕರ್ನಾಟಕ ಮತ್ತು ಗುಜರಾತ್, ಇವು ಅನುಕ್ರಮವಾಗಿ ಕನ್ನಡ ಮತ್ತು ಗುಜರಾತಿಯನ್ನು ತಮ್ಮ ಏಕೈಕ ಅಧಿಕೃತ ಭಾಷೆಯಾಗಿ ಹೊಂದಿವೆ. ತೆಲಂಗಾಣ, ಗಣನೀಯ ಪ್ರಮಾಣದಲ್ಲಿ ಉರ್ದು ಮಾತನಾಡುವ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ ಮತ್ತು ಆಂಧ್ರ ಪ್ರದೇಶ ಎರಡು ಭಾಷೆಗಳನ್ನು ಹೊಂದಿದೆ, ತೆಲುಗು ಮತ್ತು ಉರ್ದು, ಅದರ ಅಧಿಕೃತ ಭಾಷೆಗಳು. ಕೆಲವು ರಾಜ್ಯಗಳು ಅಲ್ಪಸಂಖ್ಯಾತ ಭಾಷೆಗಳನ್ನು ಅಧಿಕೃತ ಭಾಷೆಯಾಗಿ ಬಳಸುವ ಮೂಲಕ ಪ್ರವೃತ್ತಿಯನ್ನು ತಡೆ ಮಾಡುತ್ತವೆ. ಜಮ್ಮು ಮತ್ತು ಕಾಶ್ಮೀರವು ಉರ್ದುವನ್ನು ಹೊಂದಿದ್ದು ಅಲ್ಲಿನ ಜನಸಂಖ್ಯೆಯ 1% ಕ್ಕಿಂತ ಕಡಿಮೆ ಜನರು ಮಾತನಾಡುತ್ತಿದ್ದು, ಇದು 2020 ರವರೆಗೆ ಏಕೈಕ ಅಧಿಕೃತ ಭಾಷೆಯಾಗಿದೆ. ಮೇಘಾಲಯ ಜನಸಂಖ್ಯೆಯ 0.01% ಮಾತನಾಡುವ ಜನರು ಇಂಗ್ಲಿಷನ್ನು ಬಳಸುತ್ತಾರೆ. ಈ ವಿದ್ಯಮಾನವು ಬಹುಪಾಲು ಭಾಷೆಗಳನ್ನು ಕ್ರಿಯಾತ್ಮಕ ಅರ್ಥದಲ್ಲಿ "ಅಲ್ಪಸಂಖ್ಯಾತ ಭಾಷೆಗಳಾಗಿ" ಪರಿವರ್ತಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜೊತೆಗೆ, ಭಾರತವು ಸ್ವಾಯತ್ತ ಆಡಳಿತ ಪ್ರದೇಶಗಳನ್ನು ಹೊಂದಿದೆ, ಅದು ತಮ್ಮದೇ ಆದ ಅಧಿಕೃತ ಭಾಷೆಯನ್ನು ಆಯ್ಕೆ ಮಾಡಲು ಅನುಮತಿಸಬಹುದು - ಅಸ್ಸಾಂನಲ್ಲಿ ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ ಆಗಿರುವ ಒಂದು ನಿದರ್ಶನ, ಇದು ಈಗಾಗಲೇ ಬಳಕೆಯಲ್ಲಿರುವ ಅಸ್ಸಾಮಿ ಮತ್ತು ಇಂಗ್ಲಿಷ್ ಜೊತೆಗೆ ಬೋಡೋ ಭಾಷಾ ಪ್ರದೇಶಕ್ಕೆ ಅಧಿಕೃತವೆಂದು ಘೋಷಿಸಿದೆ. ಮತ್ತು ಬರಾಕ್ ಕಣಿವೆಯಲ್ಲಿ ಬಂಗಾಳಿ ಅದರ ಅಧಿಕೃತ ಭಾಷೆ. ಭಾರತದ ಪ್ರಮುಖ ಭಾಷೆಗಳು ಹಿಂದಿ ಬ್ರಿಟಿಷ್ ಭಾರತದಲ್ಲಿ, ಆಡಳಿತಾತ್ಮಕ ಉದ್ದೇಶಗಳಿಗಾಗಿ ಮತ್ತು ಉನ್ನತ ಶಿಕ್ಷಣದ ಉದ್ದೇಶಗಳಿಗಾಗಿ ಇಂಗ್ಲಿಷ್ ಏಕೈಕ ಭಾಷೆಯಾಗಿದೆ. 1947 ರಲ್ಲಿ ಭಾರತವು ಸ್ವತಂತ್ರವಾದಾಗ, ಭಾರತೀಯ ಶಾಸಕರು ಅಧಿಕೃತ ಸಂವಹನಕ್ಕಾಗಿ ಮತ್ತು ಭಾರತದಾದ್ಯಂತ ವಿವಿಧ ಭಾಷಾ ಪ್ರದೇಶಗಳ ನಡುವಿನ ಸಂವಹನಕ್ಕಾಗಿ ಭಾಷೆಯನ್ನು ಆಯ್ಕೆ ಮಾಡುವ ಸವಾಲನ್ನು ಹೊಂದಿದ್ದರು. ಲಭ್ಯವಿರುವ ಆಯ್ಕೆಗಳೆಂದರೆ: ಬಹುಸಂಖ್ಯಾತ ಜನರ (41%) ಅಧಿಕೃತ ಭಾಷೆ ಎಂದು ಗುರುತಿಸಲಾದ "ಹಿಂದಿ"ಯು ಅವರ ಸ್ಥಳೀಯ ಭಾಷೆ. ಹಿಂದಿಯೇತರ ಭಾಷಿಗರು, ವಿಶೇಷವಾಗಿ ಕನ್ನಡಿಗರು ಮತ್ತು ತಮಿಳರು ಮತ್ತು ಮಿಜೋರಾಂ ಮತ್ತು ನಾಗಾಲ್ಯಾಂಡ್‌ನವರು ಅಧಿಕೃತ ಭಾಷೆಯಾಗಿ ಇಂಗ್ಲಿಷ್‌ನ್ನು ಬಳಸಿರುವುದು. ನೋಡಿ:ಹಿಂದಿ ವಿರೋಧಿ ಆಂದೋಲನಗಳು. ಹಿಂದಿ ಮತ್ತು ಇಂಗ್ಲಿಷ್ ಎರಡನ್ನೂ ಅಧಿಕೃತ ಭಾಷೆಗಳಾಗಿ ಘೋಷಿಸಿ ಮತ್ತು ಪ್ರತಿ ರಾಜ್ಯಕ್ಕೂ ರಾಜ್ಯದ ಅಧಿಕೃತ ಭಾಷೆಯನ್ನು ಆಯ್ಕೆ ಮಾಡಲು ಸ್ವಾತಂತ್ರ್ಯವನ್ನು ನೀಡಲಾಗಿದೆ. 1950 ರಲ್ಲಿ ಭಾರತೀಯ ಸಂವಿಧಾನವು ದೇವನಾಗರಿ ಲಿಪಿಯಲ್ಲಿ ಹಿಂದಿಯನ್ನು ಒಕ್ಕೂಟದ ಅಧಿಕೃತ ಭಾಷೆಯೆಂದು ಘೋಷಿಸಿತು. ಸಂಸತ್ತು ಬೇರೆ ರೀತಿಯಲ್ಲಿ ನಿರ್ಧರಿಸದಿದ್ದರೆ, ಅಧಿಕೃತ ಉದ್ದೇಶಗಳಿಗಾಗಿ ಇಂಗ್ಲಿಷ್ ಬಳಕೆಯನ್ನು ಸಂವಿಧಾನವು ಜಾರಿಗೆ ಬಂದ 15 ವರ್ಷಗಳ ನಂತರ, ಅಂದರೆ 26 ಜನವರಿ 1965 ರಂದು ನಿಲ್ಲಿಸಬೇಕಾಗಿತ್ತು. ಆದರೆ ಬದಲಾವಣೆಯ ನಿರೀಕ್ಷೆಯು ಭಾರತದ ಹಿಂದಿ-ಮಾತನಾಡುವ ಪ್ರದೇಶಗಳಲ್ಲಿ, ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಅವರ ಸ್ಥಳೀಯ ಭಾಷೆಗಳು ಹಿಂದಿಗೆ ಸಂಬಂಧಿಸಿಲ್ಲದಿರುವಲ್ಲಿ ಹೆಚ್ಚಿನ ಎಚ್ಚರಿಕೆಗೆ ಕಾರಣವಾಯಿತು. ಇದರ ಪರಿಣಾಮವಾಗಿ, ಸಂಸತ್ತು 1963 ರಲ್ಲಿ ಅಧಿಕೃತ ಭಾಷೆಗಳ ಕಾಯಿದೆಯನ್ನು ಜಾರಿಗೊಳಿಸಿತು. ಇದು 1965 ರ ನಂತರವೂ ಹಿಂದಿಯೊಂದಿಗೆ ಅಧಿಕೃತ ಉದ್ದೇಶಗಳಿಗಾಗಿ ಇಂಗ್ಲಿಷಅನ್ನು ಮುಂದುವರೆಸಲು ಅವಕಾಶ ಒದಗಿಸಿತು. ಬೆಂಗಾಲಿ ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಅಸ್ಸಾಂನ ಬರಾಕ್ ಕಣಿವೆ ಪ್ರದೇಶ ರಾಜ್ಯಗಳನ್ನು ಒಳಗೊಂಡಿರುವ ಬಂಗಾಳ ಪ್ರದೇಶಕ್ಕೆ ಸ್ಥಳೀಯವಾಗಿದೆ. ಪ್ರಪಂಚದಲ್ಲಿ ಬೆಂಗಾಲಿ ( ಬಾಂಗ್ಲಾ : বাংলা ಎಂದು ಸಹ ಉಚ್ಚರಿಸಲಾಗುತ್ತದೆ) ಅತಿಹೆಚ್ಚು ಮಾತನಾಡುವ ಆರನೇ ಭಾಷೆಯಾಗಿದೆ. ಭಾರತದ ವಿಭಜನೆಯ ನಂತರ (1947), ಪೂರ್ವ ಪಾಕಿಸ್ತಾನದಿಂದ ನಿರಾಶ್ರಿತರು ತ್ರಿಪುರಾ, ಮತ್ತು ಜಾರ್ಖಂಡ್ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೇಂದ್ರಾಡಳಿತ ಪ್ರದೇಶದಲ್ಲಿ ನೆಲೆಸಿದರು. ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಹೆಚ್ಚಿನ ಸಂಖ್ಯೆಯ ಬಂಗಾಳಿ ಮಾತನಾಡುವ ಜನರಿದ್ದು, ಅಲ್ಲಿ ಅವರು ಆಭರಣ ಉದ್ಯಮಗಳಲ್ಲಿ ಕುಶಲಕರ್ಮಿಗಳಾಗಿ ಕೆಲಸ ಮಾಡುತ್ತಾರೆ. ಬಂಗಾಳಿ ಮಾಗಧಿ ಪ್ರಾಕೃತದಿಂದ ಹುಟ್ಟಿಕೊಂಡು, ಅಪಭ್ರಂಶ ವ್ಯುತ್ಪನ್ನವಾದ ಅಬಹತ್ತದಿಂದ ಅಭಿವೃದ್ಧಿಗೊಂಡಿತು. ಆಧುನಿಕ ಬಂಗಾಳಿ ಶಬ್ದಕೋಶವು ಮಾಗಧಿ ಪ್ರಾಕೃತ ಮತ್ತು ಪಾಲಿ ಶಬ್ದಕೋಶದ ಮೂಲವನ್ನು ಒಳಗೊಂಡಿದೆ. ಸಂಸ್ಕೃತದಿಂದ ಎರವಲು ಮತ್ತು ಇತರ ಪ್ರಮುಖ ಎರವಲುಗಳು ಪರ್ಷಿಯನ್, ಅರೇಬಿಕ್, ಆಸ್ಟ್ರೋಸಿಯಾಟಿಕ್ ಭಾಷೆಗಳು ಮತ್ತು ಇತರ ಭಾಷೆಗಳೊಂದಿಗೆ ಸಂಪರ್ಕದಲ್ಲಿದೆ. ಹೆಚ್ಚಿನ ಭಾರತೀಯ ಭಾಷೆಗಳಂತೆ, ಬೆಂಗಾಲಿಯು ಹಲವಾರು ಉಪಭಾಷೆಗಳನ್ನು ಹೊಂದಿದೆ. ಇದು ದ್ವಿಭಾಷಿಕತೆಯನ್ನು ಪ್ರದರ್ಶಿಸುತ್ತದೆ, ಸಾಹಿತ್ಯಿಕ ಮತ್ತು ಪ್ರಮಾಣಿತ ರೂಪವು ಭಾಷೆಯೊಂದಿಗೆ ಗುರುತಿಸುವ ಪ್ರದೇಶಗಳ ಆಡುಮಾತುಗಳಿಂದ ಹೆಚ್ಚು ಭಿನ್ನವಾಗಿರುತ್ತದೆ. ಬೆಂಗಾಲಿ ಭಾಷೆ ಕಲೆ, ಸಂಗೀತ, ಸಾಹಿತ್ಯ ಮತ್ತು ಧರ್ಮವನ್ನು ವ್ಯಾಪಿಸಿರುವ ಶ್ರೀಮಂತ ಸಾಂಸ್ಕೃತಿಕ ನೆಲೆಯನ್ನು ಅಭಿವೃದ್ಧಿಪಡಿಸಿದೆ. ಬೆಂಗಾಲಿಯು ಎಲ್ಲಾ ಆಧುನಿಕ ಇಂಡೋ-ಆರ್ಯನ್ ಭಾಷೆಗಳ ಕೆಲವು ಹಳೆಯ ಸುಮಾರು 10 ರಿಂದ 12 ನೇ ಶತಮಾನದವರೆಗೆ (' ಚಾರ್ಗಪದ ' ಬೌದ್ಧ ಹಾಡುಗಳು) ಸಾಹಿತ್ಯವನ್ನು ಹೊಂದಿದೆ. ಈ ಭಾಷೆಯ ರಕ್ಷಣೆಗಾಗಿ ಅನೇಕ ಚಳುವಳಿಗಳು ನಡೆದಿವೆ ಮತ್ತು 1999 ರಲ್ಲಿ ಯುನೆಸ್ಕೋ 1952 ರಲ್ಲಿ ಬಂಗಾಳಿ ಭಾಷಾ ಚಳುವಳಿಯ ಸ್ಮರಣಾರ್ಥವಾಗಿ ಫೆಬ್ರವರಿ 21 ಅನ್ನು ಅಂತರರಾಷ್ಟ್ರೀಯ ಮಾತೃಭಾಷಾ ದಿನವೆಂದು ಘೋಷಿಸಿತು. ಅಸ್ಸಾಮಿ ಅಸ್ಸಾಮಿಯಾ ಅಥವಾ ಅಸ್ಸಾಮಿ ಭಾಷೆಯು ಅಸ್ಸಾಂ ರಾಜ್ಯದಲ್ಲಿ ಹೆಚ್ಚು ಜನಪ್ರಿಯವಾಗಿದೆ. ಇದು ಪೂರ್ವ ಇಂಡೋ-ಆರ್ಯನ್ ಭಾಷೆಯಾಗಿದ್ದು, ಮಿಲಿಯನ್  2011 ರ ಭಾರತದ ಜನಗಣತಿಯ ಪ್ರಕಾರ ಎರಡು ಭಾಷೆ ಮಾತನಾಡುವವರು 15 ಕ್ಕಿಂತ ಹೆಚ್ಚು ಸ್ಥಳೀರು ಮತ್ತು 7 ಮಿಲಿಯನ್‌ಗಿಂತ ಹೆಚ್ಚು ಭಾಷಿಕರು ಸೇರಿದಂತೆ ಒಟ್ಟು 23 ಮಿಲಿಯನ್‌ಗಿಂತಲೂ ಹೆಚ್ಚು ಮಾತನಾಡುತ್ತಾರೆ. ಇದರ ಜೊತೆಗೆ ಅಸ್ಸಾಮಿಯು ಕನಿಷ್ಟ 7 ನೇ ಶತಮಾನದ CE ಗಿಂತ ಮೊದಲು ಪೂರ್ವ ಇಂಡೋ-ಆರ್ಯನ್ ಭಾಷೆಗಳು, ಮಧ್ಯ ಇಂಡೋ-ಆರ್ಯನ್ ಮಾಗಧಿ ಪ್ರಾಕೃತದಿಂದ ವಿಕಸನಗೊಂಡಿತು. ಪೂರ್ವ ಇಂಡೋ-ಆರ್ಯನ್ ಭಾಷೆಗಳಲ್ಲಿ ಅಸ್ಸಾಮಿಯು ಅಸಾಮಾನ್ಯವಾಗಿದೆ (ಇದು, ಧ್ವನಿಮಾತ್ಮಕವಾಗಿ ಕಂಠ್ಯಧ‍ವನಿ ( [ x ] ) ಮತ್ತು ಉರೂಟಾದ ( [ χ ] ) ಉಚ್ಚಾರಣೆಗಳ ನಡುವೆ ಬದಲಾಗುತ್ತದೆ). ಎಂಟನೇ ಮತ್ತು ಹನ್ನೆರಡನೆಯ ಶತಮಾನದ ನಡುವೆ ರಚಿತವಾದ ಚಾರ್ಯಪದಗಳಲ್ಲಿ ಈ ಭಾಷೆಯ ಮೊದಲ ಲಕ್ಷಣಗಳು ಕಂಡುಬರುತ್ತವೆ. ಹದಿನಾಲ್ಕನೆಯ ಶತಮಾನದಲ್ಲಿ ಆಸ್ಥಾನ ಕವಿಗಳ ಬರಹಗಳಲ್ಲಿ ಮೊದಲ ಉದಾಹರಣೆಗಳು ಹೊರಹೊಮ್ಮಿದವು, ಇದಕ್ಕೆ ಅತ್ಯುತ್ತಮ ಉದಾಹರಣೆಯೆಂದರೆ ಮಾಧವ್ ಕಂದಲಿಯ ಸಪ್ತಕಾಂಡ ರಾಮಾಯಣ, ಇದು 14 ನೇ ಶತಮಾನದ CE ಸಮಯದಲ್ಲಿ ರಾಮಾಯಣವನ್ನು ಇಂಡೋ-ಆರ್ಯನ್ ಭಾಷೆಗೆ ಅನುವಾದಿಸಿದ ಮೊದಲ ರಚನೆಯಾಗಿದೆ. ಮರಾಠಿ ಮರಾಠಿ ಇಂಡೋ-ಆರ್ಯನ್ ಭಾಷೆ. ಇದು ಕ್ರಮವಾಗಿ ಪಶ್ಚಿಮ ಭಾರತದ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಲ್ಲಿ ಅಧಿಕೃತ ಭಾಷೆ ಮತ್ತು ಸಹ-ಅಧಿಕೃತ ಭಾಷೆಯಾಗಿದೆ ಮತ್ತು ಇದು ಭಾರತದ ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. 2011 ರಲ್ಲಿ 83 ಮಿಲಿಯನ್ ಜನರು ಈ ಭಾಷೆಯನ್ನು ಮಾತನಾಡುತ್ತಿದ್ದರು. ಮರಾಠಿಯು ಭಾರತದಲ್ಲಿ ಮೂರನೇ ಅತಿ ದೊಡ್ಡ ಸ್ಥಳೀಯ ಭಾಷಿಕರನ್ನು ಹೊಂದಿದೆ ಮತ್ತು ವಿಶ್ವದ ಹೆಚ್ಚು ಮಾತನಾಡುವ ಭಾಷೆಗಳ ಪಟ್ಟಿಯಲ್ಲಿ 10 ನೇ ಸ್ಥಾನದಲ್ಲಿದೆ. ಮರಾಠಿಯು ಎಲ್ಲಾ ಆಧುನಿಕ ಇಂಡೋ-ಆರ್ಯನ್ ಭಾಷೆಗಳ ಕೆಲವು ಹಳೆಯ ಸಾಹಿತ್ಯವನ್ನು ಹೊಂದಿದೆ; 8 ನೇ ಶತಮಾನದ ಅತ್ಯಂತ ಹಳೆಯ ಶಿಲಾ ಶಾಸನಗಳು ಮತ್ತು ಸುಮಾರು 1100 AD ಯ ಸಾಹಿತ್ಯ (ಮುಕುಂದರಾಜ್ ಅವರ ವಿವೇಕ ಸಿಂಧು 12 ನೇ ಶತಮಾನಕ್ಕೆ ಸೇರಿದೆ). ಮರಾಠಿಯ ಪ್ರಮುಖ ಉಪಭಾಷೆಗಳೆಂದರೆ ಸ್ಟ್ಯಾಂಡರ್ಡ್ ಮರಾಠಿ ಮತ್ತು ವರ್ಹಾಡಿ ಉಪಭಾಷೆ. ಖಂಡೇಶಿ, ಡಾಂಗಿ, ವಡ್ವಾಲಿ, ಸಾಮವೇದಿ ಮುಂತಾದ ಇತರ ಸಂಬಂಧಿತ ಭಾಷೆಗಳಿವೆ. ಮಾಲ್ವಾಣಿ ಕೊಂಕಣಿಯು ಮರಾಠಿ ಪ್ರಭೇದಗಳಿಂದ ಹೆಚ್ಚು ಪ್ರಭಾವಿತವಾಗಿದೆ. ಮಹಾರಾಷ್ಟ್ರಿ ಪ್ರಾಕೃತದಿಂದ ಬಂದ ಹಲವಾರು ಭಾಷೆಗಳಲ್ಲಿ ಮರಾಠಿಯೂ ಒಂದು. ಮುಂದೆ ಈ ಬದಲಾವಣೆಯು ಹಳೆಯ ಮರಾಠಿಯಂತಹ ಅಪಭ್ರಂಶ ಭಾಷೆಗಳಿಗೆ ಕಾರಣವಾಯಿತು. ಮರಾಠಿ ಭಾಷಾ ದಿನವನ್ನು (ಮರಾಠಿ ದಿನ/ಮರಾಠಿ ದಿವಸ್ (ಅನುವಾದ. ಮರಾಠಿ ದಿನ/ಮರಾಠಿ ದಿವಾಸ) ಪ್ರತಿ ವರ್ಷ ಫೆಬ್ರವರಿ 27 ರಂದು ಭಾರತದ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಆಚರಿಸಲಾಗುತ್ತದೆ. ಈ ದಿನವನ್ನು ರಾಜ್ಯ ಸರ್ಕಾರವು ನಿಯಂತ್ರಿಸುತ್ತದೆ. ಇದನ್ನು ಪ್ರಖ್ಯಾತ ಮರಾಠಿ ಕವಿ ಕುಸುಮಾಗ್ರಜ ಎಂದೇ ಖ್ಯಾತರಾದ ವಿ.ವಾ.ಶಿರವಾಡಕರ್ ಅವರ ಜನ್ಮದಿನದಂದು ಆಚರಿಸಲಾಗುತ್ತದೆ. ಮರಾಠಿ ಮಹಾರಾಷ್ಟ್ರದ ಅಧಿಕೃತ ಭಾಷೆ ಮತ್ತು ದಾದ್ರಾ, ನಾಗರ ಹವೇಲಿ, ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಹ-ಅಧಿಕೃತ ಭಾಷೆಯಾಗಿದೆ. ಗೋವಾದಲ್ಲಿ, ಕೊಂಕಣಿ ಏಕೈಕ ಅಧಿಕೃತ ಭಾಷೆಯಾಗಿದೆ; ಆದರೂ ಮರಾಠಿಯನ್ನು ಎಲ್ಲಾ ಅಧಿಕೃತ ಉದ್ದೇಶಗಳಿಗಾಗಿಯೂ ಬಳಸುತ್ತಾರೆ. ಹಲವು ಶತಮಾನಗಳ ಅವಧಿಯಲ್ಲಿ ಮರಾಠಿ ಭಾಷೆ ಮತ್ತು ಜನರು ಅನೇಕ ಇತರ ಭಾಷೆಗಳು ಮತ್ತು ಉಪಭಾಷೆಗಳೊಂದಿಗೆ ಸಂಪರ್ಕಕ್ಕೆ ಬಂದರು. ಪ್ರಾಕೃತ, ಮಹಾರಾಷ್ಟ್ರ, ಅಪಭ್ರಂಶ ಮತ್ತು ಸಂಸ್ಕೃತದ ಪ್ರಾಥಮಿಕ ಪ್ರಭಾವವು ಅರ್ಥವಾಗುವಂತಹದ್ದಾಗಿದೆ. ಮರಾಠಿಯು ಆಸ್ಟ್ರೋಯಾಸಿಯಾಟಿಕ್, ದ್ರಾವಿಡ ಮತ್ತು ವಿದೇಶಿ ಭಾಷೆಗಳಾದ ಪರ್ಷಿಯನ್ ಮತ್ತು ಅರೇಬಿಕ್ ಭಾಷೆಗಳಿಂದ ಕೂಡ ಪ್ರಭಾವಿತವಾಗಿದೆ . ಮರಾಠಿಯು ಪರ್ಷಿಯನ್, ಅರೇಬಿಕ್, ಇಂಗ್ಲಿಷ್ ಮತ್ತು ಸ್ವಲ್ಪ ಫ್ರೆಂಚ್ ಮತ್ತು ಪೋರ್ಚುಗೀಸ್‌ನಿಂದ ಎರವಲು ಪದಗಳನ್ನು ಪಡಕೊಂಡಿದೆ. ಮೈತೇಯಿ ಮೈತೇಯಿ ಭಾಷೆ (ಅಧಿಕೃತವಾಗಿ ಮಣಿಪುರಿ ಭಾಷೆ ಎಂದು ಕರೆಯಲಾಗುತ್ತದೆ) ಅತ್ಯಂತ ವ್ಯಾಪಕವಾಗಿ ಮಾತನಾಡುವ ಟಿಬೆಟೊ-ಬರ್ಮನ್ ಭಾಷಾ ಉಪ ಶಾಖೆಯ ಭಾರತೀಯ ಸೈನೋ-ಟಿಬೆಟಿಯನ್ ಭಾಷೆಯಾಗಿದೆ . ಇದು ಮಣಿಪುರದ ಏಕೈಕ ಅಧಿಕೃತ ಭಾಷೆಯಾಗಿದೆ ಮತ್ತು ಇದು ಭಾರತದ ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. ಇದು ಬೋಡೋ ಜೊತೆಗೆ ಭಾರತದಲ್ಲಿ ಅಧಿಕೃತ ಸ್ಥಾನಮಾನವನ್ನು ಹೊಂದಿರುವ ಎರಡು ಸೈನೋ-ಟಿಬೆಟಿಯನ್ ಭಾಷೆಗಳಲ್ಲಿ ಒಂದಾಗಿದೆ. ಇದನ್ನು ಶ್ರೀಮಂತ ಸಾಹಿತ್ಯಕ್ಕಾಗಿ ರಾಷ್ಟ್ರೀಯ ಸಾಹಿತ್ಯ ಅಕಾಡೆಮಿಯಿಂದ ಭಾರತದ ಮುಂದುವರಿದ ಆಧುನಿಕ ಭಾಷೆಗಳಲ್ಲಿ ಒಂದೆಂದು ಗುರುತಿಸಲಾಗಿದೆ. ಇದು ಬರವಣಿಗೆಗಾಗಿ ಮೈತೇಯಿ ಲಿಪಿ ಮತ್ತು ಬಂಗಾಳಿ ಲಿಪಿ ಎರಡನ್ನೂ ಬಳಸುತ್ತದೆ. ಪ್ರಸ್ತುತವಾಗಿ ಮೈತೇಯಿ ಭಾಷೆಯನ್ನು ಭಾರತದ " ಶಾಸ್ತ್ರೀಯ ಭಾಷೆಗಳ " ಗಣ್ಯ ವರ್ಗದಲ್ಲಿ ಸೇರಿಸಲು ಪ್ರಸ್ತಾಪಿಸಲಾಗಿದೆ. ಇದಲ್ಲದೆ, ಇದನ್ನು ಪ್ರಸ್ತುತ ಅಸ್ಸಾಂ ಸರ್ಕಾರದ ಸಹವರ್ತಿ ಅಧಿಕೃತ ಭಾಷೆಯಾಗಲು ಪ್ರಸ್ತಾಪಿಸಲಾಗಿದೆ. ಮಣಿಪುರದ ಪ್ರಸ್ತುತ ಪಟ್ಟದ ರಾಜ ಮತ್ತು ಮಣಿಪುರ ರಾಜ್ಯದ ರಾಜ್ಯಸಭಾ ಸದಸ್ಯರಾಗಿರುವ ಲೀಶೆಂಬಾ ಸನಜಯೋಬಾ ಅವರ ಪ್ರಕಾರ, ಮೈತೇಯಿಯನ್ನು ಅಸ್ಸಾಂನ ಸಹವರ್ತಿ ಅಧಿಕೃತ ಭಾಷೆಯಾಗಿ ಗುರುತಿಸುವ ಮೂಲಕ, ಅಸ್ಸಾಂನಲ್ಲಿ ನೆಲೆಸಿರುವ ಮಣಿಪುರಿಯರ ಗುರುತು, ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯವನ್ನು ರಕ್ಷಿಸಬಹುದು ಎಂಬ ಅಭಿಪ್ರಾಯವಿದೆ. ಮಣಿಪುರ, ಅಸ್ಸಾಂ ಮತ್ತು ತ್ರಿಪುರಾ ರಾಜ್ಯಗಳಾದ್ಯಂತ ಮಣಿಪುರಿಗಳು ಪ್ರತಿ ವರ್ಷ ಆಗಸ್ಟ್ 20 ರಂದು ಮೈತೇಯಿ ಭಾಷಾ ದಿನ ( ಮಣಿಪುರಿ ಭಾಷಾ ದಿನ ) ಆಚರಿಸುತ್ತಾರೆ. ಈ ದಿನವನ್ನು ಮಣಿಪುರ ಸರ್ಕಾರವು ಆಚರಿಸುತ್ತದೆ. 20 ಆಗಸ್ಟ್ 1992 ರಂದು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಮೈತೀಯನ್ನು ಸೇರಿಸಿದ ದಿನದ ಸ್ಮರಣಾರ್ಥವಾಗಿದೆ. ತೆಲುಗು ತೆಲುಗು ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ ಹೆಚ್ಚು ವ್ಯಾಪಕವಾಗಿ ಮಾತನಾಡುವ ದ್ರಾವಿಡ ಭಾಷೆಯಾಗಿದೆ. ತೆಲುಗು ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಯಾನಂನಲ್ಲಿ ಅಧಿಕೃತ ಭಾಷೆಯಾಗಿದೆ, ಇದು ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಅಧಿಕೃತ ಸ್ಥಾನಮಾನವನ್ನು ಹೊಂದಿರುವ ಕೆಲವೇ ಭಾಷೆಗಳಲ್ಲಿ (ಹಿಂದಿ, ಬಂಗಾಳಿ ಮತ್ತು ಉರ್ದು ಜೊತೆಗೆ) ಒಂದಾಗಿದೆ. ಇದನ್ನು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಛತ್ತೀಸ್‌ಗಢ, ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಗುಜರಾತ್ ಮತ್ತು ಶ್ರೀಲಂಕಾದ ಜಿಪ್ಸಿ ಜನರು ಗಮನಾರ್ಹ ಸಂಖ್ಯೆಯ ಜನರು ಮಾತನಾಡುತ್ತಾರೆ. ಇದು ಭಾರತದಲ್ಲಿ ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಆರು ಭಾಷೆಗಳಲ್ಲಿ ಒಂದಾಗಿದೆ. ಭಾರತದಲ್ಲಿ ಸ್ಥಳೀಯ ಮಾತನಾಡುವವರ ಸಂಖ್ಯೆಯಿಂದ ತೆಲುಗು ನಾಲ್ಕನೇ ಸ್ಥಾನದಲ್ಲಿದೆ (2011 ರ ಜನಗಣತಿಯಲ್ಲಿ 81 ಮಿಲಿಯನ್), ಪ್ರಪಂಚದಾದ್ಯಂತ ಹೆಚ್ಚು ಮಾತನಾಡುವ ಭಾಷೆಗಳ ಎಥ್ನೋಲಾಗ್ ಪಟ್ಟಿಯಲ್ಲಿ ಹದಿನೈದನೆಯದು ಮತ್ತು ಹೆಚ್ಚು ವ್ಯಾಪಕವಾಗಿ ಮಾತನಾಡುವ ದ್ರಾವಿಡ ಭಾಷೆಯಾಗಿದೆ. ತಮಿಳು ತಮಿಳುನಾಡು, ಪುದುಚೇರಿ ಮತ್ತು ಶ್ರೀಲಂಕಾದ ಹಲವು ಭಾಗಗಳಲ್ಲಿ ಪ್ರಧಾನವಾಗಿ ಮಾತನಾಡುವ ದ್ರಾವಿಡ ಭಾಷೆ ತಮಿಳು. ಇದನ್ನು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ಮಲೇಷ್ಯಾ, ಸಿಂಗಾಪುರ್, ಮಾರಿಷಸ್ ಮತ್ತು ಪ್ರಪಂಚದಾದ್ಯಂತ ದೊಡ್ಡ ಅಲ್ಪಸಂಖ್ಯಾತರು ಮಾತನಾಡುತ್ತಾರೆ. ಭಾರತದಲ್ಲಿ ಸ್ಥಳೀಯ ಮಾತನಾಡುವವರ ಸಂಖ್ಯೆಯಲ್ಲಿ ತಮಿಳು ಐದನೇ ಸ್ಥಾನದಲ್ಲಿದೆ (2001 ರ ಜನಗಣತಿಯಲ್ಲಿ 61 ಮಿಲಿಯನ್) ಮತ್ತು ಹೆಚ್ಚು ಮಾತನಾಡುವ ಭಾಷೆಗಳ ಪಟ್ಟಿಯಲ್ಲಿ 20 ನೇ ಸ್ಥಾನದಲ್ಲಿದೆ.[ಸಾಕ್ಷ್ಯಾಧಾರ ಬೇಕಾಗಿದೆ] ಸಾಕ್ಷ್ಯಾಧಾರ ಬೇಕಾಗಿದೆ] ಇದು ಭಾರತದ 22 ಅನುಸೂಚಿತ ಭಾಷೆಗಳಲ್ಲಿ ಒಂದಾಗಿದೆ ಮತ್ತು 2004 ರಲ್ಲಿ ಭಾರತ ಸರ್ಕಾರವು ಶಾಸ್ತ್ರೀಯ ಭಾಷೆಯಾಗಿ ಘೋಷಿಸಿದ ಮೊದಲ ಭಾರತೀಯ ಭಾಷೆಯಾಗಿದೆ. ಪ್ರಪಂಚದಲ್ಲಿ ಬಹುಕಾಲ ಉಳಿದಿರುವ ಶಾಸ್ತ್ರೀಯ ಭಾಷೆಗಳಲ್ಲಿ ತಮಿಳು ಕೂಡ ಒಂದು. ಇದನ್ನು "ಶಾಸ್ತ್ರೀಯ ಭೂತಕಾಲದೊಂದಿಗೆ ಗುರುತಿಸಬಹುದಾದ ನಿರಂತರವಾದ ಸಮಕಾಲೀನ ಭಾರತದ ಏಕೈಕ ಭಾಷೆ" ಎಂದು ವಿವರಿಸಲಾಗಿದೆ. 1997 ಮತ್ತು 2005 ರಲ್ಲಿ ಯುನೆಸ್ಕೋ ಮೆಮೊರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಿಂದ ಅಂಗೀಕರಿಸಲ್ಪಟ್ಟ ಮತ್ತು ನೋಂದಾಯಿಸಲ್ಪಟ್ಟ ಭಾರತದ ಎರಡು ಆರಂಭಿಕ ಹಸ್ತಪ್ರತಿಗಳು, ತಮಿಳು ಭಾಷೆಯಲ್ಲಿವೆ. ತಮಿಳುನಾಡು, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಶ್ರೀಲಂಕಾ ಮತ್ತು ಸಿಂಗಾಪುರದ ಅಧಿಕೃತ ಭಾಷೆ ತಮಿಳು. ಇದು ಕೆನಡಾ, ಮಲೇಷಿಯಾ, ಮಾರಿಷಸ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಅಲ್ಪಸಂಖ್ಯಾತ ಭಾಷೆಯಾಗಿ ಗುರುತಿಸಲ್ಪಟ್ಟಿದೆ. ಉರ್ದು ಸ್ವಾತಂತ್ರ್ಯದ ನಂತರ, ಮಾಡರ್ನ್ ಸ್ಟ್ಯಾಂಡರ್ಡ್ ಉರ್ದು, ಹಿಂದೂಸ್ತಾನಿಯ ಪರ್ಷಿಯನ್ ರಿಜಿಸ್ಟರ್ ಪಾಕಿಸ್ತಾನದ ರಾಷ್ಟ್ರೀಯ ಭಾಷೆಯಾಯಿತು. ಬ್ರಿಟಿಷ್ ವಸಾಹತುಶಾಹಿ ಕಾಲದಲ್ಲಿ, ಅಧಿಕಾರಿಗಳಿಗೆ ಹಿಂದೂಸ್ತಾನಿ ಅಥವಾ ಉರ್ದು ಜ್ಞಾನವು ಅತ್ಯಗತ್ಯವಾಗಿತ್ತು. ಇಂಗ್ಲಿಷ್ ನಂತರ ಹಿಂದೂಸ್ತಾನಿಯನ್ನು ಬ್ರಿಟಿಷ್ ಭಾರತೀಯ ಸಾಮ್ರಾಜ್ಯದ ಎರಡನೇ ಭಾಷೆಯನ್ನಾಗಿ ಮಾಡಲಾಯಿತು ಮತ್ತು ಆಡಳಿತದ ಭಾಷೆ ಎಂದು ಪರಿಗಣಿಸಲಾಯಿತು. ಸಾಕ್ಷ್ಯಾಧಾರ ಬೇಕಾಗಿದೆ] ಬ್ರಿಟಿಷರು ಹಿಂದೂಸ್ತಾನಿ ಮತ್ತು ಇತರ ಭಾಷೆಗಳಿಗೆ ರೋಮನ್ ಲಿಪಿಯ ಬಳಕೆಯನ್ನು ಪರಿಚಯಿಸಿದರು. ಭಾರತದಲ್ಲಿ ಉರ್ದು 70 ಮಿಲಿಯನ್ ಭಾಷಿಗರನ್ನು ಹೊಂದಿತ್ತು (2001 ರ ಜನಗಣತಿಯ ಪ್ರಕಾರ), ಮತ್ತು ಹಿಂದಿಯೊಂದಿಗೆ, ಭಾರತದ ಅಧಿಕೃತವಾಗಿ ಗುರುತಿಸಲ್ಪಟ್ಟ 22 ಪ್ರಾದೇಶಿಕ ಭಾಷೆಗಳಲ್ಲಿ ಒಂದಾಗಿದೆ ಮತ್ತು ಆಂಧ್ರಪ್ರದೇಶದ, ಜಮ್ಮುವಿನ ಭಾರತೀಯ ರಾಜ್ಯಗಳಲ್ಲಿ ಮತ್ತು ಗಮನಾರ್ಹ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಕಾಶ್ಮೀರ, ದೆಹಲಿ, ಉತ್ತರ ಪ್ರದೇಶ, ಬಿಹಾರ ಮತ್ತು ತೆಲಂಗಾಣ ಅಧಿಕೃತ ಭಾಷೆಯಾಗಿದೆ. ಗುಜರಾತಿ ಗುಜರಾತಿ ಇಂಡೋ-ಆರ್ಯನ್ ಭಾಷೆ . ಇದು ಗುಜರಾತ್‌ನ ಪಶ್ಚಿಮ ಭಾರತದ ಪ್ರದೇಶಕ್ಕೆ ಸ್ಥಳೀಯವಾಗಿದೆ. ಗುಜರಾತಿ ಹೆಚ್ಚಿನ ಇಂಡೋ-ಯುರೋಪಿಯನ್ ಭಾಷಾ ಕುಟುಂಬದ ಭಾಗವಾಗಿದೆ. ಗುಜರಾತಿಯು ಹಳೆಯ ಗುಜರಾತಿಯಿಂದ ವಂಶಸ್ಥರು (ಸುಮಾರು 1100 - 1500 CE), ರಾಜಸ್ಥಾನಿ ಮೂಲದ ಅದೇ ಮೂಲ. ಗುಜರಾತಿ ಭಾರತದ ಗುಜರಾತ್ ರಾಜ್ಯದಲ್ಲಿ ಮುಖ್ಯ ಮತ್ತು ಅಧಿಕೃತ ಭಾಷೆಯಾಗಿದೆ. ಇದು ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಧಿಕೃತ ಭಾಷೆಯಾಗಿದೆ. ಕೇಂದ್ರೀಯ ಗುಪ್ತಚರ ಸಂಸ್ಥೆ (CIA) ಪ್ರಕಾರ, ಭಾರತದ ಜನಸಂಖ್ಯೆಯ 4.5% (1.21) 2011 ರ ಜನಗಣತಿಯ ಪ್ರಕಾರ ಬಿಲಿಯನ್) ಗುಜರಾತಿ ಮಾತನಾಡುತ್ತಾರೆ. ಇದು 54.6 ರಷ್ಟಿದೆ ಭಾರತದಲ್ಲಿ ಮಿಲಿಯನ್ ಜನರು ಮಾತನಾಡುತ್ತಾರೆ. ಕನ್ನಡ ದ್ರಾವಿಡ ವಿದ್ವಾಂಸ ಜ್ವೆಲೆಬಿಲ್ ಪ್ರಕಾರ ಕನ್ನಡವು ದ್ರಾವಿಡ ಭಾಷೆಯಾಗಿದ್ದು, ಇದು ಸುಮಾರು ಕ್ರಿ.ಪೂ.500ರಲ್ಲಿ ಕನ್ನಡ-ತಮಿಳು ಉಪ ಗುಂಪಿನಿಂದ ಕವಲೊಡೆಯಿತು. ಇದು ಕರ್ನಾಟಕದ ಅಧಿಕೃತ ಭಾಷೆಯಾಗಿದೆ. ದ್ರಾವಿಡ ವಿದ್ವಾಂಸರಾದ ಸ್ಟೀವರ್ ಮತ್ತು ಕೃಷ್ಣಮೂರ್ತಿಯವರ ಪ್ರಕಾರ, ಕನ್ನಡ ಭಾಷೆಯ ಅಧ್ಯಯನವನ್ನು ಸಾಮಾನ್ಯವಾಗಿ ಮೂರು ಭಾಷಾ ಹಂತಗಳಾಗಿ ವಿಂಗಡಿಸಲಾಗಿದೆ: ಹಳೆಯ (450ರಿಂದ-1200ರ ವರೆಗೆ), ಮಧ್ಯ (1200ರಿಂದ-1700ರ ವರೆಗೆ) ಮತ್ತು ಆಧುನಿಕ (1700ರಿಂದ-ಇಂದಿನವರೆಗೆ) . ಆರಂಭಿಕ ಲಿಖಿತ ದಾಖಲೆಗಳು 5 ನೇ ಶತಮಾನದಿಂದ ಬಂದವು, ಮತ್ತು ಶ್ರೀಮಂತ ಹಸ್ತಪ್ರತಿಯಲ್ಲಿ ( ಕವಿರಾಜಮಾರ್ಗ ) ಲಭ್ಯವಿರುವ ಆರಂಭಿಕ ಸಾಹಿತ್ಯವು ಕ್ರಿ,ಶ.850 . ಕನ್ನಡ ಭಾಷೆಯು ಭಾರತದ ಎಲ್ಲಾ ಭಾಷೆಗಳಲ್ಲಿ ಎರಡನೆಯ ಹಳೆಯ ಲಿಖಿತ ಪ್ರಾಚೀನತೆಯನ್ನು ಹೊಂದಿದೆ . ಕರ್ನಾಟಕದಲ್ಲಿ ಪ್ರಸ್ತುತ ಇರುವ ಒಟ್ಟು ಶಿಲಾಶಾಸನಗಳ ಸಂಖ್ಯೆಯು 25,000 ರಿಂದ 30,000 ಕ್ಕೂ ಹೆಚ್ಚು ಸಾಹಿತ್ಯ ಅಕಾಡೆಮಿಯಿಂದ 30,000 ವರೆಗೆ ಇರುತ್ತದೆ ಎಂದು ವಿದ್ವಾಂಸ ಶೆಲ್ಡನ್ ಪೊಲಾಕ್ಅಭಿಪ್ರಾಯ ಪಟ್ಟಿದ್ದಾರೆ. ಗಾರ್ಗ್ ಮತ್ತು ಶಿಪೆಲಿ ಅವರ ಪ್ರಕಾರ, ಇದು ಕರ್ನಾಟಕ ರಾಜ್ಯವನ್ನು "ವಿಶ್ವದ ರಿಯಲ್ ಎಸ್ಟೇಟ್‌ನ ಅತ್ಯಂತ ದಟ್ಟವಾಗಿ ಕೆತ್ತಲಾದ ತುಣುಕುಗಳಲ್ಲಿ ಒಂದಾಗಿದೆ" ಸಾವಿರಕ್ಕೂ ಹೆಚ್ಚು ಪ್ರಸಿದ್ಧ ಬರಹಗಾರರು ಭಾಷೆಯ ಸಂಪತ್ತಿಗೆ ಕೊಡುಗೆ ನೀಡಿದ್ದಾರೆ. ಮಲಯಾಳಂ ಒಡಿಯಾ ಸಂತಾಲಿ ಪಂಜಾಬಿ ಮೈಥಿಲಿ ಮೈಥಿಲಿ / / ˈmaɪtɪli / ; [ 1 ಮೈಥಿಲಿ ) ಭಾರತ ಮತ್ತು ನೇಪಾಳದ ಸ್ಥಳೀಯ ಇಂಡೋ-ಆರ್ಯನ್ ಭಾಷೆಯಾಗಿದೆ. ಭಾರತದಲ್ಲಿ, ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಇದನ್ನು ವ್ಯಾಪಕವಾಗಿ ಮಾತನಾಡುತ್ತಾರೆ. ಸ್ಥಳೀಯ ಭಾಷಿಕರು ಭಾರತದ ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷವಾಗಿ ಉತ್ತರ ಪ್ರದೇಶ ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರಾಂತ್ಯದಲ್ಲಿ ಕಂಡುಬರುತ್ತಾರೆ. ಭಾರತದ 2011 ರ ಜನಗಣತಿಯಲ್ಲಿ, 13,583,464 ಜನರು ತಮ್ಮ ಮಾತೃಭಾಷೆ ಎಂದು ವರದಿ ಮಾಡಿದ್ದಾರೆ. ಇದು ಭಾರತದ ಒಟ್ಟು ಜನಸಂಖ್ಯೆಯ 1.12% ರಷ್ಟಿದೆ. ನೇಪಾಳದಲ್ಲಿ, ಇದನ್ನು ಪೂರ್ವ ಟೆರೈನಲ್ಲಿ ಮಾತನಾಡುತ್ತಾರೆ ಮತ್ತು ನೇಪಾಳದ ಎರಡನೇ ಅತ್ಯಂತ ಪ್ರಚಲಿತ ಭಾಷೆಯಾಗಿದೆ. ತಿರ್ಹುತವು ಹಿಂದೆ ಲಿಖಿತ ಮೈಥಿಲಿಯ ಪ್ರಾಥಮಿಕ ಲಿಪಿಯಾಗಿತ್ತು. ಸಾಮಾನ್ಯವಾಗಿ, ಇದನ್ನು ಕೈಥಿಯ ಸ್ಥಳೀಯ ರೂಪಾಂತರದಲ್ಲಿ ಬರೆಯಲಾಗಿದೆ. ಇಂದು ಇದನ್ನು ದೇವನಾಗರಿ ಲಿಪಿಯಲ್ಲಿ ಬರೆಯಲಾಗಿದೆ. 2003 ರಲ್ಲಿ, ಮೈಥಿಲಿಯನ್ನು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಭಾರತದ ಮಾನ್ಯತೆ ಪಡೆದ ಪ್ರಾದೇಶಿಕ ಭಾಷೆಯಾಗಿ ಸೇರಿಸಲಾಯಿತು, ಇದರಿಂದಾಗಿ ಶಿಕ್ಷಣ, ಸರ್ಕಾರ ಮತ್ತು ಇತರ ಅಧಿಕೃತ ಸಂದರ್ಭಗಳಲ್ಲಿ ಬಳಸಲು ಅನುಮತಿಯಿದೆ. ಸಹ ನೋಡಿ ಕೆರಿಬಿಯನ್ ಹಿಂದೂಸ್ತಾನಿ ಫಿಜಿ ಹಿಂದಿ ಇಂಡೋ-ಪೋರ್ಚುಗೀಸ್ ಕ್ರಿಯೋಲ್ಗಳು ಬಾಂಗ್ಲಾದೇಶದ ಭಾಷೆಗಳು ಭೂತಾನ್ ಭಾಷೆಗಳು ಚೀನಾದ ಭಾಷೆಗಳು ಫಿಜಿ ಭಾಷೆಗಳು ಗಯಾನಾ ಭಾಷೆಗಳು ಮಲೇಷಿಯಾದ ಭಾಷೆಗಳು ಮಾಲ್ಡೀವ್ಸ್ ಭಾಷೆಗಳು ಮಾರಿಷಸ್ ಭಾಷೆಗಳು ಮ್ಯಾನ್ಮಾರ್ ಭಾಷೆಗಳು ನೇಪಾಳದ ಭಾಷೆಗಳು ಪಾಕಿಸ್ತಾನದ ಭಾಷೆಗಳು ರಿಯೂನಿಯನ್ ಭಾಷೆಗಳು ಸಿಂಗಾಪುರದ ಭಾಷೆಗಳು ಶ್ರೀಲಂಕಾದ ಭಾಷೆಗಳು ಟ್ರಿನಿಡಾಡ್ ಮತ್ತು ಟೊಬಾಗೊದ ಭಾಷೆಗಳು ಭಾರತದಲ್ಲಿ ಅಳಿವಿನಂಚಿನಲ್ಲಿರುವ ಭಾಷೆಗಳ ಪಟ್ಟಿ ಭಾರತದಲ್ಲಿ ಸ್ಥಳೀಯ ಮಾತನಾಡುವವರ ಸಂಖ್ಯೆಯ ಪ್ರಕಾರ ಭಾಷೆಗಳ ಪಟ್ಟಿ ರಾಷ್ಟ್ರೀಯ ಅನುವಾದ ಮಿಷನ್ ಸಿಂಧಿಯ ರೋಮನೀಕರಣ ತಮಿಳು ಡಯಾಸ್ಪೊರಾ ತೆಲುಗು ಡಯಾಸ್ಪೊರಾ ಟಿಪ್ಪಣಿಗಳು ಉಲ್ಲೇಖಗಳು ಬಾಹ್ಯ ಕೊಂಡಿಗಳು ಸೆವೆನ್ ಸಿಸ್ಟರ್ ಸ್ಟೇಟ್ಸ್ (ಭಾರತ) ವಿವರವಾದ ನಕ್ಷೆಯೊಂದಿಗೆ ಭಾರತದ ಭಾಷಾ ನಕ್ಷೆ ಭಾರತದ ಭಾಷೆಗಳು ಮತ್ತು ಲಿಪಿಗಳು ಭಾರತದಲ್ಲಿನ ಭಾಷೆಗಳ ವೈವಿಧ್ಯ ಭಾರತೀಯ ಭಾಷೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸುವ ಸಮಗ್ರ ಫೆಡರಲ್ ಸರ್ಕಾರಿ ಸೈಟ್ ಭಾರತೀಯ ಭಾಷೆಗಳಿಗೆ ತಂತ್ರಜ್ಞಾನ ಅಭಿವೃದ್ಧಿ, ಭಾರತ ಸರ್ಕಾರ ಹಿಮಾಚಲ ಪ್ರದೇಶದಲ್ಲಿ ಮಾತನಾಡುವ ಭಾಷೆಗಳು – ಹಿಮಾಚಲ ಪರೀಕ್ಷೆ ಭಾಷೆಗಳು ಭಾಷೆ ಭಾಷಾ ಕುಟುಂಬಗಳು ಭಾಷಾ ವಿಜ್ಞಾನ ಭಾರತ ಭಾರತದ ಸಂವಿಧಾನ ಭಾರತೀಯ ಭಾಷೆಗಳು
1190
https://kn.wikipedia.org/wiki/%E0%B2%A6%E0%B3%8D%E0%B2%B0%E0%B2%BE%E0%B2%B5%E0%B2%BF%E0%B2%A1%20%E0%B2%AD%E0%B2%BE%E0%B2%B7%E0%B3%86%E0%B2%97%E0%B2%B3%E0%B3%81
ದ್ರಾವಿಡ ಭಾಷೆಗಳು
ದ್ರಾವಿಡ ಭಾಷೆಗಳು ಭಾರತೀಯ ಉಪಖಂಡದ ಒಂದು ಭಾಷಾ ಕುಟುಂಬವಾಗಿದೆ. ದ್ರಾವಿಡ ಭಾಷೆಗಳು ದಕ್ಷಿಣ ಭಾರತ, ಮಧ್ಯ ಭಾರತ, ಶ್ರೀಲಂಕಾ, ಪಾಕಿಸ್ತಾನ, ನೇಪಾಳ ಪ್ರಾಂತ್ಯಗಳಲ್ಲಿ ಬಳಕೆಯಲ್ಲಿವೆ. ದ್ರಾವಿಡ ಭಾಷೆಗಳು ಯಾವುದೇ ಬೇರೆಯ ಭಾಷಾಕುಟುಂಬಕ್ಕೆ ಸೇರಿದೆಯೇ ಎಂದು ತಿಳಿದುಕೊಳ್ಳಲು ಬಹಳ ಸಂಶೋಧನೆಗಳು ನಡೆದಿವೆಯಾದರೂ, ಖಚಿತವಾದ ಸಂಬಂಧವು ಈವರೆಗೂ ದೊರೆತಿಲ್ಲ. ಹೀಗಾಗಿ ಇದನ್ನು ಒಂದು ಸ್ವತಂತ್ರ ಭಾಷಾ ಕುಟುಂಬವೆಂದೇ ಪರಿಗಣಿಸಲಾಗಿದೆ. ದ್ರಾವಿಡ ಭಾಷೆಗಳ ಮೂಲ ಭಾಷೆಯಾದ ಪೂರ್ವ ದ್ರಾವಿಡಭಾಷೆಯು ಇತಿಹಾಸ ಪೂರ್ವಕಾಲದಲ್ಲಿ, ಅನೇಕ ವರ್ಷಗಳ ಹಿಂದೆಯೇ ಭಾರತದಲ್ಲೇ ಜನಿಸಿತು ಎಂದು ಹೇಳಲಾಗುತ್ತದೆ.ದ್ರಾವಿಡಭಾಷೆಗಳಿಗೆ ಕೆಲವು ಸಾಮಾನ್ಯ ಲಕ್ಷಣಗಳಿದ್ದು ಜಗತ್ತಿನ ಬೇರೆ ಯಾವುದೇ ಭಾಷಾವಂಶದ ಜೊತೆ ಸಂಬಂಧವಿರುವಂತೆ ತೋರುವುದಿಲ್ಲ. ದ್ರಾವಿಡ ಭಾ‌ಷಾ ವರ್ಗವು ಸುಮಾರು ೮೫ ಭಾಷೆಗಳನ್ನು ಒಳಗೊಂಡಿದ್ದು ಸುಮಾರು ೨೧೭ ದಶಲಕ್ಷ ಜನರು ಮಾತನಾಡುತ್ತಾರೆ. ಇವು ದಕ್ಷಿಣ ಭಾರತದಲ್ಲಿ ಮತ್ತು ಪೂರ್ವ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಮತ್ತು ಈಶಾನ್ಯ ಶ್ರೀಲಂಕ, ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಇರಾನ್, ಮಲೇಷಿಯಾ, ಸಿಂಗಪುರಗಳಲ್ಲಿ ಬಳಕೆಯಲ್ಲಿವೆ. ಉಗಮ ದ್ರಾವಿಡ ಜನಾಂಗದ ಭಾಷೆ ದ್ರಾವಿಡ ಭಾಷೆ. ದ್ರಾವಿಡರು ಭಾರತದ ಮೂಲ ನಿವಾಸಿಗಳು ಎಂದು ಹೇಳಲಾಗುತ್ತದೆ. ಕಾಲ ಕಳೆದಂತೆ ಅವರಲ್ಲೇ ಗುಂಪುಗಳುಂಟಾದವು. ಭೌಗೋಳಿಕ ಸಾಮಾಜಿಕ ಭಾಷಿಕ ಕಾರಣಗಳಿಂದಾಗಿ ಅವರು ಆಡುತ್ತಿದ್ದ ಭಾಷೆಯಲ್ಲಿ ಪ್ರಭೇದಗಳುಂಟಾದುವು. ಮೊದಲು ಬಂದ ದ್ರಾವಿಡ ಜನಾಂಗದವರು ಆಡುತ್ತಿದ್ದ ದ್ರಾವಿಡ ಭಾಷೆಯನ್ನು ಮೂಲ ದ್ರಾವಿಡ ಭಾಷೆಯೆಂದು ನಿರ್ದೇಶಿಸುವುದು ವಾಡಿಕೆ. ಮೂಲಜನಾಂಗ ಪಂಗಡ ಪಂಗಡಗಳಾಗಿ ವಿಂಗಡವಾದಂತೆ ಮೂಲಭಾಷೆಯೂ ಭಿನ್ನಭಿನ್ನ ಭಾಷೆ-ಉಪಭಾಷೆಗಳಾಗಿ ಒಡೆದುಕೊಂಡವು. ಮೂಲಬೇರಿನಿಂದ ಹೀಗೆ ಬೇರೆಯಾಗಿ ಕವಲಾದ ಭಾಷೆಗಳೇ ದ್ರಾವಿಡ ಭಾಷೆಗಳು. ದ್ರಾವಿಡ ಗುಂಪುಗಳಲ್ಲಿ ಸಂಪರ್ಕ ತಗ್ಗಿದಂತೆ, ತಪ್ಪಿದಂತೆ ವ್ಯತ್ಯಾಸಗಳೂ ಹೆಚ್ಚತೊಡಗಿದುವು. ವೈವಿಧ್ಯತೆ ಈಗಿನ ಭಾಷಾ ಸಮೀಕ್ಷೆಯ ಲೆಕ್ಕದಂತೆ ಇಂಥ ಇಪ್ಪತ್ತೈದು ದ್ರಾವಿಡ ಭಾಷೆಗಳು ಇಂದು ಪ್ರಚಾರದಲ್ಲಿವೆ. ಇವಿಷ್ಟೇ ದ್ರಾವಿಡಭಾಷೆಗಳೆಂದು ಕಡೆಯ ಮಾತಾಗಿ ಹೇಳುವುದು ಸಾಧ್ಯವಿಲ್ಲ. ಕನ್ನಡ ನಾಡಿನ ಆಗುಂಬೆ, ಬಾಳೆಬರೆ ಬೆಟ್ಟಗಳಲ್ಲಿ ಬಾಳುತ್ತಿರುವ ಬಾಳೇರರ ಸ್ವರೂಪ ಮತ್ತು ಮಧ್ಯಭಾರತದ ಬಸ್ತಾರ ಪ್ರದೇಶದ ದೊರ್ಲಿ ಮತ್ತು ಕೊರಾಪುತ್ ಪ್ರದೇಶದ ಸವರ್ ಭಾಷೆಗಳ ಸ್ವರೂಪ ಇನ್ನೂ ನಿರ್ಧಾರವಾಗಿಲ್ಲ. ದ್ರಾವಿಡ ಭಾಷಾ ಪರಿವಾರದಲ್ಲಿ ಅವುಗಳ ಸ್ಥಾನವೇನೆಂಬುದನ್ನು ಈಗ ಹೇಳಲು ಸಾಧ್ಯವಾಗಿಲ್ಲವಾದರೂ ಅವು ದ್ರಾವಿಡ ಪಂಗಡಕ್ಕೆ ಅಳವಡುತ್ತವೆಂದು ಸ್ಥೂಲವಾಗಿ ಅವಕಾಶವಿದೆ. ಈಗ ಖಚಿತವಾಗಿ ತಿಳಿದುಬಂದಿರುವ 25 ದ್ರಾವಿಡ ಭಾಷೆಗಳಲ್ಲಿ ಒಂದೊಂದು ಭಾಷೆಗೆ ಸೇರಿದ ಉಪಭಾಷೆಗಳೂ ಇವೆ. ಸುಮಾರು ಹದಿಮೂರುವರೆ ಕೋಟಿ ಜನ ದ್ರಾವಿಡ ಭಾಷೆಗಳನ್ನಾಡುತ್ತಾರೆ. ಪ್ರಪಂಚದಲ್ಲಿನ ಹಿರಿಯ ಭಾಷಾ ಪರಿವಾರಗಳ ಶ್ರೇಣಿಯಲ್ಲಿ ಇದಕ್ಕೆ 5ನೆಯ ಸ್ಥಾನವಿದೆ. ಈ ದ್ರಾವಿಡ ಭಾಷೆಗಳು ಒಂದು ಸ್ವತಂತ್ರ ಭಾಷಾ ಪರಿವಾರದವೆಂದು ಪರಿಗಣಿತವಾಗಿದೆ. ಭಾರತದ ಅಥವಾ ಪ್ರಪಂಚದ ಬೇರೆ ಯಾವುದೇ ಭಾಷಾ ಪರಿವಾರದೊಡನೆ ಈ ದ್ರಾವಿಡ ಭಾಷಾ ಪರಿವಾರವನ್ನು ಸಮೀಕರಿಸುವ ಪ್ರಯತ್ನಗಳನ್ನು ಭಾಷಾವಿಜ್ಞಾನಿಗಳು ಸಂಪೂರ್ಣವಾಗಿ ಮಾನ್ಯಮಾಡಿಲ್ಲ. ದ್ರಾವಿಡ ಭಾಷೆಗಳು ಪ್ರಮುಖವಾಗಿ ಒಟ್ಟಿಗೆ ಒತ್ತಾಗಿ ಕಾಣಿಸುವುದು ದಕ್ಷಿಣ ಭಾರತದಲ್ಲಿ. ಮಧ್ಯ ಮತ್ತು ಉತ್ತರ ಭಾರತದ ವಿವಿಧ ಪ್ರದೇಶಗಳಲ್ಲೂ ಕೆಲವು ದ್ರಾವಿಡ ಭಾಷೆಗಳು ವ್ಯವಹಾರದಲ್ಲಿವೆ. ಈಗ ಗೊತ್ತಾಗಿರುವ ೨೫ ದ್ರಾವಿಡ ಭಾಷೆಗಳು ಕನ್ನಡ, ತೆಲುಗು, ತಮಿಳು, ಮಲಯಾಳಂ, ತುಳು, ಕೊಡಗು, ಮಾಲ್ತೊ, ಬ್ರಾಹುಇ, ಕುರುಖ್, ಒಲ್ಲಾರಿ, ಗದಬ, ಪೆಂಗೂ, ಕೊಯ, ಬಡಗ, ಗೋಂಡಿ, ಕೊಂಡ, ಕುಯಿ, ಕುವಿ, ಪಾರ್ಜಿ, ಕೋಲಾಮಿ, ಕೊರಗ, ನಾಯ್ಕಿ, ತೊದ, ಕೋತ, ಮಂಡ, ಇವುಗಳಲ್ಲಿ ಮೊದಲ ನಾಲ್ಕು ಭಾಷೆಗಳು ಸಾಹಿತ್ಯಿಕ ಭಾಷೆಗಳು. ಈ ಭಾಷೆಗಳಿಗೆ ಸಾಕಷ್ಟು ಪ್ರಾಚೀನವಾದ ಲಿಖಿತ ಸಾಹಿತ್ಯವಿದೆ. ಇವುಗಳಿಗೆ ಮೊದಲಿಂದಲೂ ತಮ್ಮದೇ ಆದ ಲಿಪಿ ಕೂಡ ಇದೆ. ತುಳು ಮತ್ತು ಕೊಡಗು ಭಾಷೆಗಳು ಅಲಿಪಿ ಭಾಷೆಗಳಾದರು ಶ್ರುರೂಪಿಯಾದ ಶ್ರವ್ಯ ಸಾಹಿತ್ಯ ಉಳಿದುಬಂದಿರುವುದರಿಂದ ಇವನ್ನು ಸಾಹಿತ್ಯಿಕ ದ್ರಾವಿಡ ಭಾಷೆಗಳ ಜೊತೆಗೆ ಸೇರಿಸುವುದು ರೂಢಿ.ಇನ್ನುಳಿದ ಹತ್ತೊಂಬತ್ತು ಭಾಷೆಗಳನ್ನು ಶ್ರವಣ ಭಾಷೆಗಳೆಂದು ನಿರ್ದೇಶಿಸಿದ್ದಾರೆ. ಇವನ್ನು ಅಸಂಸ್ಕತ ಅಥವಾ ಅಲಿಪಿ ಭಾಷೆಗಳೆಂದೂ ಕರೆಯುತ್ತಾರೆ. ಮೂಲದ್ರಾವಿಡದಿಂದ ಈ ೨೫ ದ್ರಾವಿಡ ಭಾಷೆಗಳು ಯಾವಾಗ ಬೇರೆಯಾದುವೆಂಬುದು ಖಚಿತವಾಗಿ ತಿಳಿಯದು. ಸ್ಥೂಲವಾಗಿ ಅದನ್ನು ಗುರುತಿಸುವ ಪ್ರಯತ್ನಗಳು ನಡೆದಿವೆ, ಭಾಷಾಕಾಲಕ್ರಮವಿಜ್ಞಾನ ಪದ್ಧತಿ ಆಧಾರದಿಂದ ಬಹುಮಟ್ಟಿಗೆ ದ್ರಾವಿಡ ಭಾಷೆಗಳು ಮೂಲದ್ರಾವಿಡದಿಂದ ಕ್ರಿಸ್ತಶಕದ ಅರಂಭದ ವೇಳೆಗೆ ಬೇರ್ಪಟ್ಟಿದ್ದವು.ಮೂಲದ್ರಾವಿಡದಿಂದ ಮೊದಲು ತೆಲಗು ಬೇರೆಯಾಯಿತೆಂದು ಕೆಲವರೂ ತುಳು ಬೇರೆಯಾಯಿತೆಂದು ಕೆಲವರು ಕುಯಿ ಬೇರೆಯಾಯಿತೆಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವರ್ಗೀಕರಣ ದ್ರಾವಿಡ ಭಾಷೆಗಳನ್ನು ಅವು ಭಾರತದ ಯಾವ ಯಾವ ಭಾಗದಲ್ಲಿ ಬಳಕೆಯಲ್ಲಿವೆ ಎಂಬ ಭೌಗೋಳಿಕ ಆಧಾರದಿಂದ ಉತ್ತರ, ಮಧ್ಯ ಮತ್ತು ದಕ್ಷಿಣದವೆಂದು ವರ್ಗೀಕರಿಸಿದ್ದಾರೆ. ಭಾಷಿಕ ಆಧಾರದಿಂದ ಮಾಡಿದ ದ್ರಾವಿಡ ಭಾಷೆಗಳ ವರ್ಗೀಕರಣವನ್ನು ಭಾಷಾವಿಜ್ಞಾನಿಗಳು ಮಾನ್ಯ ಮಾಡಿದ್ದಾರೆ. ಅದರ ಪ್ರಕಾರ ಕೂಡ ಉತ್ತರ, ಮಧ್ಯ ಮತ್ತು ದಕ್ಷಿಣ ಎಂಬ ತ್ರಿಭಜನೆಯಿದೆಯಾದರೂ ಇಲ್ಲಿ ಭೌಗೋಳಿಕ ಆಧಾರ ಗೌಣ. ಭೌಗೋಳಿಕವಾಗಿ ದಕ್ಷಿಣದಲ್ಲಿರುವ ಭಾಷೆಗಳು ಭಾಷಾಸಾಮ್ಯ ಅಥವಾ ವೈಷಮ್ಯದಿಂದಾಗಿ ಮಧ್ಯ ಅಥವಾ ಉತ್ತರದ ಶಾಖೆಗೆ ಸೇರಬಹುದು. ಉದಾಹರಣೆಗೆ ತೆಲಗು ಭೌಗೋಳಿಕವಾಗಿ ದಕ್ಷಿಣದಲ್ಲಿದ್ದರೂ ಭಾಷಿಕವಾಗಿ ಮಧ್ಯ ದ್ರಾವಿಡ ಶಾಖೆಗೆ ಅಳವಡುತ್ತದೆ. ಕೊರಗ ಭಾಷೆಯೂ ಇದೇ ರೀತಿ ದಕ್ಷಿಣದಲ್ಲಿ ಪ್ರಚಾರದಲ್ಲಿದ್ದರೂ ಉತ್ತರ ದ್ರಾವಿಡ ಶಾಖೆಗೆ ಹೊಂದಿಕೊಳ್ಳುತ್ತದೆ. ಈ ವರ್ಗೀಕರಣ, ಬಹುಶಃ ಭಾರತವನ್ನು ಪ್ರವೇಶಿಸಿದ ಮೇಲೆ ದ್ರಾವಿಡ ಜನಾಂಗ ಪಂಗಡಗಳಾಗಿ ವಿಂಗಡವಾದ ಮೂರು ಮುಖ್ಯ ಶಾಖೆಗಳನ್ನು ತೋರಿಸುತ್ತದೆ. ಈ ಬಗೆಯಾದ ವರ್ಗೀಕರಣದ ಹಿಂದಿರುವ ಉದ್ದೇಶ ಭಾಷಿಕ ವ್ಯಾಸಂಗಕ್ಕೆ ಸಿಗುವ ಸೌಕರ್ಯ. ಭಾಷೆಗಳು ಅವುಗಳಲ್ಲಿನ ಧ್ವನಿ ಹಾಗೂ ಆಕೃತಿಕ ರಚನೆಯ ದೃಷ್ಟಿಯಿಂದ ಕೆಲವು ಸಮಾನ ಲಕ್ಷಣಗಳನ್ನು ಹಂಚಿಕೊಂಡಿರುತ್ತವೆ. ಒಂದೊಂದು ದ್ರಾವಿಡ ಭಾಷೆಗಳಲ್ಲೂ ಧ್ವನಿಗಳಲ್ಲಿ, ಶಬ್ದಗಳಲ್ಲಿ ವ್ಯತ್ಯಾಸಗಳು ಸ್ವತಂತ್ರವಾಗಿ ಪ್ರತ್ಯೇಕವಾಗಿ ನಡೆದಿವೆಯಾದರೂ 25 ದ್ರಾವಿಡ ಭಾಷೆಗಳಲ್ಲೂ ಸ್ಥೂಲವಾಗಿ ರಾಚನಿಕ ಸಮಾನತೆಯಿದೆ. ಹಾಗೆ ಇರುವುದರಿಂದಲೇ ಅವೆಲ್ಲಾ ಒಂದು ಮೂಲಕ್ಕೆ ಸೇರಿದ ಭಾಪೆಗಳೆಂದು ಹೇಳುತ್ತಿರುವುದು. ದ್ರಾವಿಡ ಭಾಷಾ ಪರಿವಾರದ ಉತ್ತರ, ಮಧ್ಯ ಮತ್ತು ದಕ್ಷಿಣ ಎಂಬ ಮೂರು ಶಾಖೆಗಳಲ್ಲಿ ಮತ್ತೆ ಕೆಲಕೆಲವು ಭಾಷೆಗಳು ತಮ್ಮ ತಮ್ಮಲ್ಲೇ ತೋರುವ ಹೆಚ್ಚಿನ ಇಲ್ಲವೆ ಕಡಿಮೆ ಹೊಂದಾಣಿಕೆ ಇಲ್ಲವೇ ವ್ಯತ್ಯಾಸದ ದೃಷ್ಟಿಯಿಂದ ಉಪಶಾಖೆಗಳಾಗಿ ವಿಂಗಡವಾಗುತ್ತವೆ. ದ್ರಾವಿಡ ಭಾಷಾ ಶಾಸ್ತ್ರಜ್ಞರು ಮಾನ್ಯ ಮಾಡಿರುವ ದ್ರಾವಿಡ ಭಾಷೆಗಳ ವರ್ಗೀಕರಣ ಈ ರೀತಿ ಇದೆ : ಮೊದಲು ಒಂದೇ ಆಗಿದ್ದ ಮೂಲ ದ್ರಾವಿಡ ಭಾಷೆಯಿಂದ ಮೂಲ ಕುಯಿ ಭಾಷೆ ಬೇರ್ಪಟ್ಟಿತು. ಅನಂತರ ಕಾಲಾನುಕಾಲಕ್ಕೆ ಈತರ ದ್ರಾವಿಡ ಭಾಷೆಗಳು ಬೇರ್ಪಟ್ಟವು. ದ್ರಾವಿಡ ಭಾಷೆಗಳ ಪಟ್ಟಿ ದಕ್ಷಿಣ ದ್ರಾವಿಡ ಭಾಷೆಗಳ ಉಪ ಕುಟುಂಬ: ಕನ್ನಡ ತುಳು ತಮಿಳು ಮಲಯಾಳಂ ಬಡಗ ಕೊಡವ ಥಕ್ ಕುರುಂಬ ಪಳಿಯನ್ ಕೋಟ ಬೆಳ್ಳಾರಿ ಮಧ್ಯ ದಕ್ಷಿಣ ದ್ರಾವಿಡ ಭಾಷೆಗಳ ಉಪ ಕುಟುಂಬ: ತೆಲುಗು ಗೊಂಡಿ ಮರಿಯ ಉತ್ತರ ದ್ರಾವಿಡ ಭಾಷೆಗಳ ಉಪ ಕುಟುಂಬ: ಬ್ರಾಹುಯಿ ಮಾಲ್ತೊ ಕುರುಖ್ ಮಧ್ಯ ದ್ರಾವಿಡ ಭಾಷೆಗಳ ಉಪ ಕುಟುಂಬ: ಕೊಲಮಿ-ನಾಯ್ಕಿ ಪರ್ಜಿ-ಗಡಬ ಧ್ವನಿ ವ್ಯವಸ್ಥೆ ಇಂದಿನ ದ್ರಾವಿಡ ಭಾಷೆಗಳ ಧ್ವನಿವ್ಯವಸ್ಥೆಯಲ್ಲಿ ವ್ಯತ್ಯಾಸಗಳು ಸಾಕಷ್ಟಿವೆ. ಅವನ್ನು ಮೂಲ ದ್ರಾವಿಡ ಧ್ವನಿವ್ಯವಸ್ಥೆಯೊಡನೆ ಹೋಲಿಸಿ ನೋಡಿದಾಗಲೂ ಈ ಅಂಶ ಸ್ಪಷ್ಟವಾಗುತ್ತದೆ. ಮೂಲ ದ್ರಾವಿಡ ಧ್ವನಿ ವ್ಯವಸ್ಥೆಯಲ್ಲಿ, ಅದರಲ್ಲೂ ಸ್ವರ ವ್ಯವಸ್ಥೆಯಲ್ಲಿ ಹೆಚ್ಚು ಭಿನ್ನಾಭಿಪ್ರಾಯಗಳಿಲ್ಲ. ಮೂಲ ದ್ರಾವಿಡ ಸ್ವರ ವ್ಯವಸ್ಥೆ ಹೀಗಿದೆ : ಇ ಉ ಎ ಒ ಅ ದೀರ್ಘತ್ವ :- ಈ ಸ್ವರವ್ಯವಸ್ಥೆ ಸರಳವಾಗಿತ್ತು. ಇದರಲ್ಲಿ ಸಂಧ್ಯಕ್ಷರಗಳು ಇರಲಿಲ್ಲ. ಮೂಲ ದ್ರಾವಿಡದಲ್ಲಿ ಇದ್ದ ಸ್ವರಗಳು ಹತ್ತು. ಐದು ಹ್ರಸ್ವ, ಐದು ದೀರ್ಘ, ಈ ಹತ್ತು ಸ್ವರಗಳು ಮೂಲದ್ರಾವಿಡಕ್ಕೆ ಆರೋಪಿಸಿ ವಿವರಿಸುವಾಗ 5 ಸ್ವರಗಳು ಮತ್ತು ದೀರ್ಘತ್ವವೆಂಬ ಒಂದು ಯೋಗವಾಹ-ಹೀಗೆ ಆರು ಸ್ವರಗಳೆಂದು ಹೇಳಬಹುದು. ಈ ಸ್ವರವ್ಯವಸ್ಥೆಗೆ ಅಯ್ ಅವ್ ಎಂಬ ಸ್ವರವ್ಯಂಜನ ವರ್ಣಗುಚ್ಛವನ್ನು ಪುನರ್‍ರಚಿಸಿಕೊಳ್ಳುವ ಸಾಧ್ಯತೆಯನ್ನೂ ಸೂಚಿಸಿದ್ದಾರೆ. ದ್ರಾವಿಡ ಭಾಷೆಗಳ ಸ್ವರಗಳಲ್ಲಿ ಅ-ಆ ನಿಮ್ನ ಸ್ವರಗಳು, ಇ-ಈ ಪೂವೋಚ್ಚ ಸ್ವರಗಳು, ಎ-ಏ ಪೂರ್ವ ಮಧ್ಯಸ್ವರಗಳು, ಉ-ಊ ಪಶ್ಚೋಚ್ಚ ಸ್ವರಗಳು, ಒ-ಓ ಪಶ್ಚ ಮಧ್ಯ ಸ್ವರಗಳು. ಹೀಗೆ ಒಟ್ಟು ಸ್ವರಗಳು ಹತ್ತು. ಧ್ವನಿಗಳು ಬರಬಹುದಾದ ಪರಿಸರದ ದೃಷ್ಟಿಯಿಂದ ಈ ಹತ್ತೂ ಸ್ವರಗಳು ಶಬ್ದದ ಆದಿಯಲ್ಲಿ ಬರಬಹುದು. ಈ ಹತ್ತು ಸ್ವರಗಳು ಸ್ವರ ಸ್ಥಾನದಲ್ಲಿ ಬಂದಾಗಲೂ ಅವಕ್ಕೆ ಆದಿ ಇಲ್ಲವೇ ಅಂತ್ಯದ ಸ್ಥಾನದಲ್ಲಿ ಅಥವಾ ಪರವಾಗಿ ಬರುವ ವ್ಯಂಜನ ವರ್ಣಗಳನ್ನು ಆಧರಿಸಿ ಕೆಲವು ನಿರ್ಬಂಧಗಳು ಏರ್ಪಡುತ್ತವೆ. (ವ1) ಸ1 ವ2 ಸ2 .... ಈ ಮಾದರಿಯಲ್ಲಿ ಸ2 ಮೂಲದ್ರಾವಿಡ ಶಬ್ದರಚನೆಯಲ್ಲಿ ಅ ಇ ಉ ಸ್ವರಗಳು ಮಾತ್ರ ಬರಬಹುದೆಂಬ ಒಂದು ಅಭಿಪ್ರಾಯವಿದೆ. ಇದಕ್ಕೆ ಅಪವಾದಗಳನ್ನು ಗುರುತಿಸಿರುವುದರಿಂದ ಈ ಅಭಿಪ್ರಾಯದಲ್ಲಿ ಚರ್ಚೆಗೆ ಅವಕಾಶವಿದೆ. ದ್ರಾವಿಡ ಭಾಷೆಗಳ ಶಬ್ದಗಳಲ್ಲಿ ಎರಡು ಸ್ವರಗಳು ಅಕ್ಕಪಕ್ಕದಲ್ಲಿ ಬರುವುದಿಲ್ಲವೆಂಬುದನ್ನು ಗಮನಿಸಬಹುದು. ಇಂದಿನ ದ್ರಾವಿಡ ಭಾಷೆಗಳಲ್ಲಿ ಪರಿಸರಬದ್ಧವಾಗಿ ಈ ಸ್ವರಗಳು ವ್ಯತ್ಯಾಸಗಳನ್ನು ಪಡೆದಿವೆ. ಕನ್ನಡ ಪಾರ್ಜಿ ತೊದ ಬ್ರಾಹುಇ ಮೊದಲಾದ ಭಾಷೆಗಳಲ್ಲಿ ಇಂಥ ವ್ಯತ್ಯಾಸಗಳನ್ನು ಕಾಣಬಹುದು. ಆದ್ಯಕ್ಷರದಲ್ಲಿ ದೀರ್ಘಸ್ವರವಿದ್ದು ಪರವಾಗಿ ಸ್ವರಾದಿಯಾದ ಪ್ರಕೃತಿಸಾಧಕ ಪ್ರತ್ಯಯ ಬಂದರೆ ಆದಿಸ್ವರ (ವ) ಸ ಹ್ರಸ್ವವಾಗುತ್ತದೆ. ಪರಿಣಾಮವಾಗಿ ದೀರ್ಘಸ್ವರಯುಕ್ತಧಾತುಗಳಿಗೆ ಎರಡೆರಡು ರೂಪಗಳು ಸಿದ್ಧಿಸುವುದುಂಟು. ಈ ದೀರ್ಘಸ್ವರಗಳು ಕನ್ನಡ ಮೊದಲಾದ ಕೆಲವು ಭಾಷೆಗಳಲ್ಲಿ ವ್ಯಂಜನಗುಚ್ಚಗಳೆದುರೂ ಹ್ರಸ್ವವಾಗುವುದುಂಟು, ಇಲ್ಲವೆ ಪರವಾದ ವ್ಯಂಜನಗಳಲ್ಲೊಂದು ಲೋಪವಾಗುವುದೂ ಉಂಟು. ದ್ರಾವಿಡ ಭಾಷೆಗಳಲ್ಲಿ ಶಬ್ದದ ನಡುವಣ ಸ್ವರ ದುರ್ಬಲವಾದುದು. ಅದರಿಂದ ಸ್ವರವ್ಯತ್ಯಾಸಗಳು ಸಹಜ. ಮೂಲ ದ್ರಾವಿಡ ವ್ಯಂಜನ ವ್ಯವಸ್ಥೆ : ಪ್ ತ್ ತ್ ಟ್ ಚ್ ಕ್ ¾õï ಮ್ ನ್ ಣ್ ಞï ಲ್ ಳ್ ರ್ ವ್ ಯ್ ಈ ಧ್ವನಿಮಾಗಳ ಜೊತೆಗೆ ಆಯ್ದಂ ಎಂಬುದು ಮೂಲದ್ರಾವಿಡ ಭಾಷೆಯಲ್ಲಿದ್ದಿರಬಹುದೆಂಬ ಅಭಿಪ್ರಾಯವೂ ಇದೆ. ಇದನ್ನು ಒಪ್ಪಿಕೊಂಡರೆ ಕೆಲವು ಶಬ್ದಯುಗ್ಮಗಳಲ್ಲಿ ವ್ಯಕ್ತವಾಗುವ ಹ್ರಸ್ವದೀರ್ಘ ಸ್ವರಪಲ್ಲಟದ ವಿವರಣೆ ಸುಲಭವಾಗುತ್ತದೆ. ಮುಖ್ಯವಾಗಿ ಭಾಷಾಸ್ವೀಕರಣ ಕಾರಣದಿಂದ ಮೂಲದ್ರಾವಿಡ ಈ ವ್ಯಂಜನ ವ್ಯವಸ್ಥೆ ಸ್ವರವ್ಯವಸ್ಥೆಗಿಂತ ಅಧಿಕವಾಗಿ ಆಧುನಿಕ ದ್ರಾವಿಡ ಭಾಷೆಗಳಲ್ಲಿ ವ್ಯತ್ಯಾಸಗಳನ್ನು ಪಡೆದಿದೆ. ಇವುಗಳಲ್ಲಿ ಬಹು ಮುಖ್ಯವಾದ ಕೆಲವು ಮಾರ್ಪಾಟುಗಳನ್ನು ಮಾತ್ರ ಇಲ್ಲಿ ನಿರೂಪಿಸಿದೆ. ಕನ್ನಡ ತೆಲಗು ಮೊದಲಾದ ಕೆಲವು ದ್ರಾವಿಡ ಭಾಷೆಗಳು ಮೂಲ ದ್ರಾವಿಡದಲ್ಲಿ ಇದ್ದುದಕ್ಕಿಂತ ಹೆಚ್ಚು ವ್ಯಂಜನಗಳನ್ನು ಅಳವಡಿಸಿಕೊಂಡಿವೆ-ಮಹಾಪ್ರಾಣ ವರ್ಣಗಳು, ಊಷ್ಮ ವರ್ಣಗಳು ಇತ್ಯಾದಿ. ಈ ಹೆಚ್ಚಿನ ವರ್ಣಗಳನ್ನು ಸಂಸ್ಕøತ, ಪ್ರಾಕೃತ ಮೊದಲಾದ ಆರ್ಯ ಭಾಷೆಗಳಿಂದ ಸ್ವೀಕರಿಸಿರುವ ಸಾಧ್ಯತೆಯಿದೆ. ಮೂಲದ್ರಾವಿಡದಲ್ಲಿ ಸ್ವರ್ಶ ವ್ಯಂಜನ ವರ್ಣಗಳು ಘೋಷಾಘೋಷ ಭೇದವನ್ನು ಪಡೆದಿದ್ದುವಾದರೂ ಆ ಭೇದ ಸನ್ನಿವೇಶ ಬದ್ಧವಾಗಿತ್ತು. ಘೋಷ-ಅಘೋಷಗಳು ಪ್ರತ್ಯೇಕ ಸ್ವತಂತ್ರ ಧ್ವನಿಮಾಗಳಾಗಿರಲಿಲ್ಲ. ಒಂದೇ ಧ್ವನಿಯ ಉಪಧ್ವನಿಗಳಾಗಿದ್ದವು. ಶಬ್ದಾದಿಯಲ್ಲಿ ಅಘೋಷ ಧ್ವನಿಗಳು ಮಾತ್ರ ಬರುತ್ತಿದ್ದುವು. ಶಬ್ದದ ನಡುವೆ ಬಿಡಿಯಾದ ಘೋಷಧ್ವನಿಗಳು ದ್ವಿತ್ವ ಸ್ಪರ್ಶಗಳೂ ಬರುತ್ತಿದ್ದುವು. ಇದನ್ನು ಕ್-, ಗ್-, -ಕ್- ಎಂಬಂತೆ ತೋರಿಸಬಹುದು. ಇವನ್ನು ಬರೆಯಲು ಒಂದೊಂದೇ ಲಿಪಿಸಂಕೇತ ಸಾಕಿತ್ತು. ಸ್ವರ್ಶ ವರ್ಣಗಳ ಸಂಖ್ಯೆ ಕ್ ಚ್ ಟ್ ತ್ ಪ್ ಎಂದು ಐದು ಮಾತ್ರ. ಇಂದಿಗೂ ತಮಿಳು ಮುಂತಾದ ಕೆಲವು ದ್ರಾವಿಡ ಭಾಷೆಗಳಲ್ಲಿ ಈ ವ್ಯತ್ಯಾಸಯಿದೆ. ಇದರ ಜೊತೆಗೆ ಮೂಲ ದ್ರಾವಿಡದಲ್ಲಿ ವತ್ಸ್ರ್ಯ ಸ್ಪರ್ಶಧ್ವನಿಯೊಂದು | ¿õï| ಇತ್ತು. ಮತ್ತು ಉಳಿದ ಸ್ವರ್ಶ ಧ್ವನಿಗಳಿರುವಂತೆ ಇದಕ್ಕೂ ಘೋಷ-ಅಘೋಷ ಪ್ರಭೇದಗಳನ್ನು ಕಲ್ಪಿಸಬಹುದು. ಕನ್ನಡವೇ ಮೊದಲಾದ ಹಲವು ಆಧುನಿಕ ದ್ರಾವಿಡ ಭಾಷೆಗಳಲ್ಲಿ ಈ ಆರು ಸ್ವರ್ಶ ವರ್ಣಗಳು ಕೆಲವು ವ್ಯತ್ಯಾಸಗಳನ್ನು ಪಡೆದಿವೆ. ಕನ್ನಡ, ತೆಲಗು, ತುಳು ಮೊದಲಾದ ಕೆಲವು ದ್ರಾವಿಡ ಭಾಷೆಗಳಲ್ಲಿ ಘೋಷ-ಅಘೋಷ ವ್ಯತ್ಯಾಸ ಅರ್ಥಾಭಿವ್ಯಕ್ತಿಯಲ್ಲಿ ಉಪಯುಕ್ತ ವ್ಯತ್ಯಾಸವಾಗಿ ಪರಿಣಮಿಸಿದುದರಿಂದ ಕ್, ಗ್, ಚ್, ಜ್, ತ್, ದ್, ಪ್, ಬ್, ಎಂಬ ಸ್ವತಂತ್ರ ಧ್ವನಿಮಾಗಳು ಏರ್ಪಟ್ಟಿವೆ. ಇವುಗಳಿಗೆ ಕನ್ನಡ ಮತ್ತು ತೆಲಗು ಭಾಷೆಯಲ್ಲಿ ಪ್ರತ್ಯೇಕ ಲಿಪಿಗಳಿವೆ. ಇಂಥದೊಂದು ಧ್ವನಿ ಮಾರ್ಪಾಟಿಗೂ ದ್ರಾವಿಡೇತರ ಆರ್ಯ ಭಾಷೆಗಳ ಪ್ರಭಾವ ಕಾರಣವಿರಬಹುದು. ಕೆಲವು ದ್ರಾವಿಡ ಭಾಷೆಗಳಲ್ಲಿ ಚ್-ಸ್ಪರ್ಶವರ್ಣ ಸ್-ಧ್ವನಿಯಾಗಿ ಪರಿವರ್ತಿತವಾಗಿದೆ. ಚ್ ( ಸ್- ಧ್ವನಿವ್ಯತ್ಯಾಸ ಯಾವ ಪರಿಸರದಲ್ಲಿ ನಡೆದಿದೆಯೆಂಬುದರ ನಿಯಮ ಇನ್ನೂ ಸ್ಪಷ್ಟವಾಗಿಲ್ಲ. ಕನ್ನಡ ಮೊದಲಾದ ಕೆಲವು ದಕ್ಷಿಣ ದ್ರಾವಿಡ ಭಾಷೆಗಳಲ್ಲಿ ಶಬ್ದಾದಿಯ ಸ್ಪರ್ಶವರ್ಣ ಚ್-ಹಲವು ಶಬ್ದಗಳಲ್ಲಿ ಲೋಪವಾಗಿದೆ ; ಇಲ್ಲಿಯೂ ಯಾವ ಪರಿಸರದಲ್ಲಿ ಚ್-ಧ್ವನಿಲೋಪ ಘಟಿಸಿದೆಯೆಂಬ ನಿಯಮವೂ ಸರಿಯಾಗಿ ತಿಳಿಯದು. ಕನ್ನಡ ತೆಲಗು ಮೊದಲಾದ ಕೆಲವು ದ್ರಾವಿಡ ಭಾಷೆಗಳಲ್ಲಿ ಮಾತ್ರ ಶಬ್ದಾದಿಯ ವ್-ಧ್ವನಿ ಹಲವು ಶಬ್ದಗಳಲ್ಲಿ ಉಭಯೋಷ್ಠ್ಯ ಘೋಷ ಸ್ವರ್ಶ ವರ್ಣ ಬ್-ಆಗಿ ಪರಿವರ್ತಿತವಾಗಿದೆ. ಮೂಲ ದ್ರಾವಿಡದಲ್ಲಿ ಮ್ ನ್ ಣ್ ಞï ಎಂಬ ನಾಲ್ಕು ಅನುನಾಸಿಕ ವರ್ಣಗಳಿದ್ದುವು. ಕೆಲವು ಪ್ರಕೃತಿ ಸಾಧಕ ಪ್ರತ್ಯಯಗಳು ಪರವಾಗಿ ಬಂದಾಗ ಅನುನಾಸಿಕ ಹಾಗೂ ಸಮಾನ ಸ್ಥಾನೀಯ ಸ್ಪರ್ಶವರ್ಣಗಳಿರುವ ವ್ಯಂಜನ ಗುಚ್ಛಗಳು ಸ್ಪರ್ಶಗಳಿಗೆ ಸಮವಾದ ದ್ವಿವ್ಯಂಜನಗಳನ್ನು ಪಡೆಯುತ್ತದೆ. ಮೂಲ ದ್ರಾವಿಡಕ್ಕೆ ಕಲ್ಪಿತವಾಗಿರುವ ಅಘೋಷ ಓಷ್ಕ್ಯ ಸ್ವರ್ಶ ಪ್-ಶಿಷ್ಯ ಕನ್ನಡದಲ್ಲಿ ಹ್-ಆಗಿದೆ. ಮತ್ತು ಶಿಷ್ಟೇತರ ಕನ್ನಡದಲ್ಲಿ ಅದೂ ಲೋಪವಾಗಿದೆ : ಪ್( ಹ್--(. ಮೂಲ ದ್ರಾವಿಡದಲ್ಲಿದ್ದ ಧ್ವನಿ ಕನ್ನಡದಲ್ಲಿ ಪರಿಸರಬದ್ಧವಾಗಿ ಳ್ ಇಲ್ಲವೇ ರ್ ಆಗೂ ¿õï ಧ್ವನಿ ರ್ ಆಗೂ ಪರಿವರ್ತನೆ ಪಡೆದಿದೆ. ಕನ್ನಡೇತರ ಉಳಿದ ದ್ರಾವಿಡ ಭಾಷೆಗಳಲ್ಲೂ ಹಲವು ಬಗೆಯ ಧ್ವನಿವ್ಯತ್ಯಾಸಗಳು ಮೂಲ ದ್ರಾವಿಡದಿಂದ ಪ್ರತ್ಯೇಕವಾದ ಮೇಲೆ ಸಂಭವಿಸಿವೆ. ಪ್ರತಿವೇಷ್ಟಿತ ಧ್ವನಿಗಳು ದ್ರಾವಿಡ ಭಾಷೆಗಳಲ್ಲಿ ಶಬ್ದದ ಪ್ರಾರಂಭದಲ್ಲಿ ಬರುವುದಿಲ್ಲವೆಂಬುದು ಮತ್ತೊಂದು ದ್ರಾವಿಡ ಧ್ವನಿನಿಯಮ. ಆಧುನಿಕ ದ್ರಾವಿಡ ಭಾಷೆಗಳಲ್ಲಿ ಏಕಾಕ್ಷರಿಗಳೂ ಬಹ್ವಕ್ಷರಿಗಳೂ ಆದ ಕ್ರಿಯಾ ಧಾತುಗಳಿವೆ. ಆದರೆ ಮೂಲ ದ್ರಾವಿಡ ಭಾಷೆಯ ಧಾತುಗಳು ಏಕಾಕ್ಷರಿಗಳಾಗಿದ್ದುವು. ಇಂದಿನ ದ್ವ್ಯಕ್ಷರಿ ಹಾಗೂ ತ್ರ್ಯಕ್ಷರಿ ಕ್ರಿಯಾಧಾತುಗಳಲ್ಲಿ ಕೆಲವು ಪ್ರಕೃತಿ ಸಾಧಕ ಪ್ರತ್ಯಯಗಳಿಂದ ಘಟಕವಾಗಿರುವುದನ್ನು ಚಾರಿತ್ರಿಕ ಹಾಗೂ ವರ್ಣನಾತ್ಮಕ ಅಧ್ಯಯನದಿಂದ ಶ್ರುತಪಡಿಸಬಹುದು. ವ್ಯಂಜನಾಂತ ಶಬ್ದಗಳು ಸ್ವರಾಂತಗಳಾಗಿ ಮಾರ್ಪಾಟು ಪಡೆದಾಗ ಕೆಲವು ಏಕಾಕ್ಷರಿ ಕ್ರಿಯಾಧಾತುಗಳು ದ್ವ್ಯಕ್ಷರಿಗಳಾಗಿವೆ. ದ್ರಾವಿಡ ಭಾಷೆಗಳು ಅಂಟು ಭಾಷೆಗಳು. ಇಲ್ಲಿ ಪ್ರಕೃತಿ ಪ್ರತ್ಯಯಗಳು ಅಂಟಿಕೊಂಡಿದ್ದರೂ ಸುಲಭವಾಗಿ ಗುರುತಿಸಿ ಬಿಡಿಸಿ ತೋರಿಸಬಹುದು. ಮೂಲ ದ್ರಾವಿಡದಲ್ಲಿ ಸಕರ್ಮಕ ಅಕರ್ಮಕ ಪ್ರಕೃತಿಗಳಿದ್ದವು. ಆಧುನಿಕ ದ್ರಾವಿಡ ಭಾಷೆಗಳಲ್ಲೂ ಇದು ಬಹುಮಟ್ಟಿಗೆ ಉಳಿದುಬಂದಿದೆ. ಮೂಲದ್ರಾವಿಡ ಕ್ರಿಯಾ ಪದಗಳಿಗೆ ಎರಡಕ್ಕಿಂತ ಹೆಚ್ಚು ಕಾಲವಾಚಕ ಪ್ರತ್ಯಯಗಳಿವೆ. ಉತ್ತಮ, ಮಧ್ಯಮ, ಮತ್ತು ಪ್ರಥಮ ಎಂಬ ಮೂರು ಪುರುಷಗಳಿವೆ. ಏಕವಚನ ಮತ್ತು ಬಹುವಚನ ಎಂಬ ಎರಡು ವಚನಗಳಿವೆ. ಉತ್ತಮ ಪುರುಷ ಬಹುವಚನದಲ್ಲಿ ವ್ಯಾವರ್ತಕ ಮತ್ತು ಅಭಿವ್ಯಾಪಕ ರೂಪಗಳು ಹೆಚ್ಚಿನ ದ್ರಾವಿಡ ಭಾಷೆಗಳಲ್ಲಿವೆ. ಪ್ರಥಮ ಪುರುಷದಲ್ಲಿ ಮಾನವರು ಹಾಗೂ ಇತರರು ಎಂಬಂತೆಯೂ ಲಿಂಗಭೇದ ಮೂಲ ದ್ರಾವಿಡದಲ್ಲಿದ್ದಿರಬೇಕೆಂಬ ಅಭಿಪ್ರಾಯವಿದೆ. ಕನ್ನಡದಂಥ ಕೆಲವು ದ್ರಾವಿಡ ಭಾಷೆಗಳಲ್ಲಿ ಈ ವ್ಯವಸ್ಥೆ ಕಂಡುಬರುತ್ತದೆ. ಆದರೆ ಈ ಹೇಳಿಕೆಗೆ ಪ್ರತಿಕೂಲವಾದ ಆಧಾರಗಳು ಕುಯಿ, ಗೋಂಡಿ ಮುಂತಾದ ಭಾಷೆಗಳಲ್ಲಿವೆ. ಕುರುಖ್ ನಂಥ ಕೆಲವು ಭಾಷೆಗಳಲ್ಲಿ ಮಾತ್ರ ಮಧ್ಯಮ ಮತ್ತು ಉತ್ತಮ ಪುರುಷಗಳಲ್ಲೂ ಕರ್ತೃವಿನ ಲಿಂಗವಿಕ್ಷೆಯಿದೆ. ಮೂಲದ್ರಾವಿಡದಲ್ಲಿ ಎರಡೇ ಲಿಂಗಗಳಿದ್ದಿರಬಹುದು. ತೊದ, ಬ್ರಾಹೂಇ ಭಾಷೆಗಳಲ್ಲಿ ಲಿಂಗವಿಕ್ಷೆಯೇ ಇಲ್ಲ. ದ್ರಾವಿಡ ಭಾಷೆಗಳಲ್ಲಿ ಶಬ್ದರೂಪವನ್ನು ಅನುಸರಿಸಿ ಲಿಂಗಭೇಧವಿಲ್ಲ. ಆದರೆ ಸಂಸ್ಕøತದಲ್ಲಿದೆ. ಇಲ್ಲಿ ಲಿಂಗ ಅರ್ಥಾನುಸಾರಿ. ಮೂಲದ್ರಾವಿಡದಲ್ಲಿ ಬಾಂಧವ್ಯ ವಾಚಕ ಶಬ್ದಗಳು ಆ ಸಂಬಂಧ ಯಾರೊಂದಿಗೆ ಎಂಬುದನ್ನೂ ಸೂಚಿಸುತ್ತಿದ್ದವು. ಇಂದು ಕುರುಖ್, ಕೋಲಾಮಿಯಂಥ ಕೆಲವೇ ದ್ರಾವಿಡ ಭಾಷೆಗಳಲ್ಲಿ ಈ ವಿಧಾನವಿದೆ. ಸರ್ವನಾಮ ರೂಪಗಳಲ್ಲಿ ಹೆಚ್ಚಿನ ವ್ಯತ್ಯಾಸಗಳಿಲ್ಲ. ವಿಭಕ್ತಿಗಳ ಮತ್ತು ಇತರ ಪ್ರತ್ಯಯಗಳಲ್ಲಿ ಕೆಲವು ವ್ಯತ್ಯಾಸಗಳಾಗಿವೆ. ಕೆಲವು ಮುಕ್ತ ಆಕೃತಿಮಾಗಳು ಬದ್ಧ ಆಕೃತಿಮಾಗಳಾಗಿವೆ. ದ್ರಾವಿಡ ಭಾಷೆಗಳಲ್ಲಿ ಕರ್ಮಣಿ ಪ್ರಯೋಗಕ್ಕೆ ಅವಕಾಶ ಕಡಿಮೆ. ಒಂದರಿಂದ ಹತ್ತು ಮತ್ತು ನೂರು ಎಂಬ ಸಂಖ್ಯಾವಾಚಕಗಳಿವೆ. ಈ ರೂಪಗಳಿಂದ 999 ರ ವರೆಗೂ ಸಂಖ್ಯೆಯನ್ನು ಹೇಳಲಾಗುತ್ತದೆ. ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಸಾವಿರ, ಲಕ್ಷ, ಕೋಟಿ ಮೊದಲಾದ ಸಂಖ್ಯಾವಾಚಕಗಳು ಸಂಸ್ಕøತದಿಂದ ಬಂದ ಶಬ್ದಗಳು. ಕೆಲವು ದ್ರಾವಿಡ ಭಾಷೆಗಳಲ್ಲಿ ಹತ್ತಕ್ಕಿಂತ ಕಡಿಮೆ ಸಂಖ್ಯೆ ಹೇಳುವ ಶಬ್ದಗಳಲ್ಲಿ ಕೆಲವು ಲೋಪವಾಗಿದೆ. ಗೋಂಡಿ, ಕುಯಿ, ಪಾರ್ಜಿಯಂಥ ಕೆಲವು ಭಾಷೆಗಳಷ್ಟೇ ಐದು ಮತ್ತು ಆರು ಎಂಬ ಸಂಖ್ಯಾವಾಚಕಗಳಲ್ಲಿ ಅವುಗಳ ಮೂಲರೂಪಗಳಲ್ಲಿದ್ದ ಶಬ್ದಾದಿಯ ಚ್-ಧ್ವನಿಯನ್ನುಳಿಸಿಕೊಂಡಿದೆ. ಮನೋಭಾವವಿರಲಿಲ್ಲವಲ್ಲದೆ ಅವು ಮಿಶ್ರಿತವಾದ ಗುಂಪುಗಳೇ ಆಗಿದ್ದವು. ಆದ್ದರಿಂದ ಭಾರತದ ಇತಿಹಾಸದ ಪ್ರಾರಂಭದಿಂದಲೂ ಇಂಥ ಜನಾಂಗದ ಮಿಶ್ರಣವನ್ನು ಕಾಣಬಹುದಾಗಿದೆ. ಭಾಷೆಯೇ, ಜನಾಂಗದ ಜೀವಾಳವಾದುದರಿಂದ, ಆದರಿಂದಲೇ ಒಂದು ಜನಾಂಗದ ಸಂಸ್ಕøತಿಯನ್ನು ಅಳೆಯಬೇಕೇ ಹೊರತು, ಬುಡಕಟ್ಟಿನ ಆಧಾರದ ಮೇಲಲ್ಲ. ಮೇಲೆ ಪಟ್ಟಿ ಮಾಡಿದ ಆರು ಗುಂಪುಗಳು ಒಂದು ಜನಾಂಗವಾಯಿತಲ್ಲದೆ ಅದು ನಾಲ್ಕು ಭಾಷೆಗಳನ್ನು ಹೊಂದಿತ್ತು. ಅದರಲ್ಲಿ ದ್ರಾವಿಡ ಮತ್ತು ಇಂಡೊ -ಯೂರೋಪಿಯನ್ (ಆರ್ಯ) ಭಾಷೆಗಳು ಸೇರಿವೆ. ದ್ರಾವಿಡ ಭಾಷೆಗಳು ವಿಶೇಷವಾಗಿ ದಕ್ಷಿಣದಲ್ಲಿ ಕೇಂದ್ರೀಕೃತವಾದರೂ ಉತ್ತರ ಭಾರತದ ಛೋಟನಾಗಪುರದಲ್ಲಿ, ದ್ರಾವಿಡ ಭಾಷೆಯನ್ನು ಬಳಸುವ ಓರಾಯನರಲ್ಲಿ ಮತ್ತು ಕೋಲ್ ಭಾಷೆಯನ್ನು ಬಳಸುವ ಮುಂಡರಲ್ಲಿ ಬಲೂಚಿಸ್ಥಾನದ ಬ್ರಾಹುಇ ಭಾಷೆಯಲ್ಲಿ ದ್ರಾವಿಡ ಭಾಷೆಗಳ ಪ್ರಭಾವವನ್ನು ಕಾಣಬಹುದಾಗಿದೆ. ಮುಖ್ಯವಾಗಿ ಭಾರತಕ್ಕೆ ಬಂದು ನೆಲಸಿದ ವಿವಿಧ ಜನಾಂಗಗಳು ತಮ್ಮ ಸಂಸ್ಕøತಿಯನ್ನು ಬೆಳಸಿ, ಅವೆಲ್ಲವನ್ನೂ ಒಂದುಗೂಡಿಸಿ, ಭಾರತೀಯ ಸಂಸ್ಕøತಿಯನ್ನು ರೂಪಿಸಿಕೊಂಡಿದ್ದು ಇತಿಹಾಸದ ಮುಖ್ಯ ಘಟನೆಯಾಗಿದೆ. ಈ ಸಂಸ್ಕøತಿಯ ಸಾಗರದಲ್ಲಿ ಗುಂಪುಗಳ ಕೊಡುಗೆಯನ್ನು ಬೇರ್ಪಡಿಸುವುದು ಸುಲಭದ ಕೆಲಸವಾಗದಿದ್ದರೂ ಅವುಗಳ ಮುಖ್ಯ ಲಕ್ಷಣಗಳು ತೋರಿಸುವುದು ಕಷ್ಟದ ಕೆಲಸವಾಗದು. ಭೌಗೋಳಿಕ ಹರಡುವಿಕೆ ದ್ರಾವಿಡರು ನಾಗರಿಕರಾಗಿದ್ದು ಭಾರತದಲ್ಲಿ ಪಟ್ಟಣಗಳನ್ನು ಕಟ್ಟಿ ನಗರ ನಾಗರಿಕತೆಯನ್ನು ರೂಪಿಸಿದರು. ವ್ಯಾಪಾರ ಮತ್ತು ವಾಣಜ್ಯ ಸಂಬಂಧಗಳನ್ನು ಬೆಳೆಸಿದರು. ಭಾರತದ ಎಲ್ಲ ಕಡೆಗಳಲ್ಲೂ ನೆಲೆಸಿದರು. ಬಲೂಚಿಸ್ತಾನದಲ್ಲಿ ಬಳಕೆಯಲ್ಲಿರುವ ಬ್ರಾಹುಇ ಭಾಷೆ ದ್ರಾವಿಡ ಭಾಷೆಯ ಛಾಯೆಯನ್ನು ಹೊಂದಿರುವುದರಿಂದ, ದ್ರಾವಿಡರು ಸಿಂಧ್, ರಜಪುಟಾಣ ಮತ್ತು ಮಾಳವದ ಮೂಲಕ ಈಗಿನ ಮಹಾರಾಷ್ಟ್ರ ಪ್ರದೇಶ ಮತ್ತು ದಕ್ಷಿಣ ಭಾರತದ ಇತರ ಪ್ರದೇಶಗಳಿಗು ಪ್ರಸರಿಸಿದರೆಂದು ಹೇಳಬಹುದಾಗಿದೆ. ಅಲ್ಲದೆ ಸುಪ್ರಸಿದ್ಧವಾದ ಸಿಂಧೂಕಣಿವೆ ನಾಗರಿಕತೆ ಪಟ್ಟಣದಲ್ಲಿ ಕೇಂದ್ರೀಕೃತವಾಗಿದ್ದು, ಅಲ್ಲಿನ ಭಾಷೆ ದ್ರಾವಿಡ ಭಾಷೆಯನ್ನು ಹೋಲುವುದರಿಂದ ಸಿಂಧೂಕಣಿವೆಯ ಜನ ದ್ರಾವಿಡ ಗುಂಪಿಗೆ ಸೇರಿದವರೆಂದು ಹೇಳವುದು ತಪ್ಪಾಗಲಾರದು. ಈ ಕ್ಷೇತ್ರದಲ್ಲಿ ಸಂಶೋಧನೆ ನಡೆಸಿದ ಹೀರಾಸ್ ಮತ್ತು ಎಸ್.ಆರ್.ರಾವ್ ಅವರು ಇದೇ ತೀರ್ಮಾನಕ್ಕೆ ಬಂದಿದ್ದಾರೆ. ಪ್ರಭಾವ ಆರ್ಯರು ಭಾರತಕ್ಕೆ ಬಂದಾಗ ಇಲ್ಲಿ ಎರಡು ಗುಂಪುಗಳನ್ನು ಕಂಡರು. ಅವರನ್ನು ದಾಸ ಅಥವಾ ದಸ್ಯು ಮತ್ತು ನಿಷಾದರೆಂದು ಕರೆದರು. ಶತ್ರುಗಳಾದ ಅವರು ಆರ್ಯರಿಗೆ ದಾಸರೆನಿಸಿಕೊಂಡರು, ಕಳ್ಳರೆನಿಸಿಕೊಂಡರು. ಆದರೆ ದಾಸ ಅಥವಾ ದಸ್ಯು ಎಂಬ ಪದಗಳು ಪ್ರಾಚೀನ ಇರಾನಿನಲ್ಲೇ ಬಳಕೆಯಲ್ಲಿದ್ದುವು. ಅದು ಗುಂಪಿನ ನಾಮವಾಗಿತ್ತೇ ಹೊರತು ಸೇವಕನೆಂಬ ಅರ್ಥದಲ್ಲಿರಲಿಲ್ಲ. ಅಲ್ಲದೆ ಭಾರತದ ತತ್ತ್ವಶಾಸ್ತ್ರ, ಸಾಹಿತ್ಯ, ಧರ್ಮ ಮತ್ತು ಸಂಸ್ಕತಿಯಲ್ಲಿಯ ಉದಾತ್ತ ಮತ್ತು ಒಳ್ಳೆಯ ಭಾವನೆಗಳೆಲ್ಲ ಆರ್ಯರಿಂದಲೇ ರೂಪಿತವಾಯಿತೆಂದೂ ಇಲ್ಲಿನ ಕಂದಾಚಾರ ಪದ್ಧತಿ ಮತ್ತು ಹಿಂದೂ ಧರ್ಮದಲ್ಲಿ ಕಂಡು ಬರುವ ಮೂಢನಂಬಿಕೆಗಳು, ಕೆಟ್ಟ ಲಕ್ಷಣಗಳು ದ್ರಾವಿಡರಿಂದ ಬಂತೆಂದೂ ಹೇಳುವುದು ವಾಡಿಕೆ. ಆದರೆ ಈ ಅಭಿಪ್ರಾಯ ಈಗ ತಿರಸ್ಕರಿಸಲ್ಪಟ್ಟಿದೆ. ಆರ್ಯ ಮತ್ತು ದ್ರಾವಿಡ ಲಕ್ಷಣಗಳನ್ನು ಅಳವಾಗಿ ಪಾಂಡಿತ್ಯಪೂರ್ಣವಾಗಿ ವಿವೇಚಿಸಿರುವ ವಿದ್ವಾಂಸರ ಅಭಿಪ್ರಾಯದ ಪ್ರಕಾರ ಭಾರತದ ನಾಗರಿಕತೆ ಮತ್ತು ಸಂಸ್ಕತಿಯ ಬೆಳವಣಿಗೆಯಲ್ಲಿ ದ್ರಾವಿಡರ ಪಾತ್ರ ಹಿರಿದಾದುದೆಂದೂ ಸಿಂಧೂ ಕಣಿವೆಯ ಸಂಸ್ಕತಿ ಆರ್ಯರಿಗಿಂತ ಉತ್ತಮವಾದುದೆಂದೂ ತಿಳಿದು ಬಂದಿದೆ. ಹಿಂದೂಧರ್ಮದ ಅನೇಕ ದೇವತೆಗಳು ದ್ರಾವಿಡರ ಕೊಡುಗೆಯೇ ಶಿವಾರಾಧನೆ, ಮಾತೃದೇವತೆಯ ಪೂಜೆ, ನಂದಿ, ಶಿವ ಉಮೆಯರ ಪೂಜೆ, ಯೋಗ - ಇವು ದ್ರಾವಿಡ ಲಕ್ಷಣಗಳು. ದೇವರನ್ನು ಪೂಜಿಸುವ ಪದ್ಧತಿ ದ್ರಾವಿಡರದೇ ಆಗಿದೆ. ಹಿಂದೂಧರ್ಮದಲ್ಲಿ ಶ್ರೇಷ್ಠಸ್ಥಾನ ಪಡೆದ ಶಿವ, ಉಮೆ, ವಿಷ್ಣು, ಹನುಮಂತ ಮತ್ತು ಗಣೇಶ ದ್ರಾವಿಡ ದೇವರುಗಳು ಹಿಂದೂ ಧರ್ಮದಲ್ಲಿ ಸೇರಿಹೋಗಿವೆ. ದ್ರಾವಿಡರ ಪ್ರಭಾವವನ್ನು ಭಾರತೀಯರ ಸಂಸ್ಕತಿಯ ನಾನಾ ಪ್ರಕಾರಗಳಲ್ಲಿ ಕಾಣಬಹುದಾಗಿದೆ. ಉತ್ತರ ಭಾರತದ ಊರುಗಳ ಹೆಸರಿನಲ್ಲಿ, ವೇದ ಮತ್ತು ಭಾರತದ ಸಾಹಿತ್ಯದಲ್ಲಿ, ಆರ್ಯರ ಭಾಷೆಗಳಲ್ಲಿ. ಮತಪದ್ಧತಿಯಲ್ಲಿ ಸಂಪ್ರದಾಯದಲ್ಲಿ ಪುರಾಣ ಇತಿಹಾಸದಲ್ಲಿ, ದ್ರಾವಿಡ ಲಕ್ಷಣಗಳನ್ನು ಗುರುತಿಸಲಾಗಿದೆ. ಆರ್ಯ ಸಂಸ್ಕøತಿಯ ಬಹುಭಾಗ ದ್ರಾವಿಡರದೇ ಆಗಿದೆ. ಭಾರತೀಯ ಆರ್ಥಿಕ ವ್ಯವಸ್ಥೆ, ಭಾರತೀಯ ಭಾಷೆಗಳು, ಸಮಾಜಿಕ ಸಂಸ್ಥೆಗಳು ಮತ್ತು ಸಂಪ್ರದಾಯ ಮದುವೆ ಮುಂತಾದ ಪದ್ಧತಿಗಳು - ಇವುಗಳಲ್ಲಿ ದ್ರಾವಿಡರ ಪ್ರಭಾವವಿದೆ. ನಡೆ ನುಡಿಗಳಲ್ಲಿ ದ್ರಾವಿಡ ಛಾಯೆಯಿದೆ.ಮೈಸೂರು ಬಾಹ್ಯ ಸಂಪರ್ಕಗಳು ದ್ರಾವಿಡ ಭಾಷೆಗಳ ಪದಕೋಶ ಎಥ್ನೋಲಾಗ್‍ನಲ್ಲಿ ದ್ರಾವಿಡ ಭಾಷೆಗಳ ಪುಟ. ದ್ರಾವಿಡ ಭಾಷಾ ಕುಟುಂಬಕ್ಕೆ 4,500 ವರ್ಷಗಳು!-28 May, 2018 ಉಲ್ಲೇಖ ಭಾರತೀಯ ಭಾಷೆಗಳು ಭಾಷಾ ಕುಟುಂಬಗಳು
1192
https://kn.wikipedia.org/wiki/%E0%B2%AC%E0%B2%B8%E0%B2%B5%E0%B3%87%E0%B2%B6%E0%B3%8D%E0%B2%B5%E0%B2%B0
ಬಸವೇಶ್ವರ
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು. ತನ್ನ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ, ಅವರು ಅನುಭವ ಮಂಟಪ (ಅಥವಾ, "ಆಧ್ಯಾತ್ಮಿಕ ಅನುಭವದ ಭವನ), ಇಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ಪುರುಷ ಮತ್ತು ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ಪ್ರಶ್ನೆಗಳನ್ನು ಮುಕ್ತವಾಗಿ ಚರ್ಚಿಸಲು ಸ್ವಾಗತಿಸಿತು.ಬಸವಣ್ಣನವರ ಜೊತೆ ೭೭೦ ಅಮರಗಣಂಗಳು ಇದ್ದರೆಂದು ಮತ್ತು ೧,೯೬,೦೦೦ ಶರಣರಿದ್ದರೆಂದು ಐತಿಹಾಸಿಕ ಪುರಾವೆಗಳಿವೆ.   ಸಾಂಪ್ರದಾಯಿಕ ದಂತಕಥೆಗಳು ಮತ್ತು ವಿದ್ವತ್ಪೂರ್ಣ ಗ್ರಂಥಗಳು ಲಿಂಗಾಯ ಸ್ಥಾಪಕ ಬಸವಣ್ಣ ಎಂದು ಉಲ್ಲೇಖಿಸುತ್ತವೆ . ಆದಾಗ್ಯೂ, ಆಧುನಿಕ ಕಲಾಚುರಿ ಶಾಸನಗಳಂತಹ ಐತಿಹಾಸಿಕ ಸಾಕ್ಷ್ಯವನ್ನು ಅವಲಂಬಿಸಿದೆ ಬಸವ ಕವಿ ತತ್ತ್ವಜ್ಞಾನಿಯಾಗಿದ್ದು, ಈಗಾಗಲೇ ಅಸ್ತಿತ್ವದಲ್ಲಿದ್ದ ಸಂಪ್ರದಾಯವನ್ನು ಸಂಸ್ಕರಿಸಿದರು ಮತ್ತು ಶಕ್ತಿಯನ್ನು ತುಂಬಿದರು ಎಂದು ಉಲ್ಲೇಖಿಸುತ್ತವೆ.ಕನ್ನಡ ಕವಿ ಹರಿಹರರಿಂದ ರಚಿತ (c.1180) ಬಸವರಾಜದೇವರ ರಗಳೆ (ಸಿ.ಎಸ್ .8080 ರಲ್ಲಿ 25 ವಿಭಾಗಗಳು ಲಭ್ಯವಿದೆ) ಸಾಮಾಜಿಕ ಸುಧಾರಕನ ಜೀವನದ ಬಗ್ಗೆ ಲಭ್ಯವಿರುವ ಅತ್ಯಂತ ಆರಂಭಿಕ ಖಾತೆಯಾಗಿದೆ ಮತ್ತು ಲೇಖಕನು ತನ್ನ ನಾಯಕನ ಸಮಕಾಲೀನ ಸಮೀಪದಲ್ಲಿದ್ದ ಕಾರಣದಿಂದಾಗಿ ಅದು ಮುಖ್ಯವೆಂದು ಪರಿಗಣಿಸಲಾಗಿದೆ.ಬಸವನ ಜೀವನ ಮತ್ತು ವಿಚಾರಗಳ ಸಂಪೂರ್ಣ ವಿವರ 13 ನೇ ಶತಮಾನದ ಪವಿತ್ರ ತೆಲುಗು ಪಠ್ಯ ಪಾಲ್ಕುರಿಕಿ ಸೋಮನಾಥರ ಬಸವ ಪುರಾಣದಲ್ಲಿ ನಿರೂಪಿಸಲ್ಪಟ್ಟಿದೆ. ಬಸವ ಸಾಹಿತ್ಯ ಕೃತಿಗಳು ಕನ್ನಡ ಭಾಷೆಯಲ್ಲಿ ವಚನ ಸಾಹಿತ್ಯವನ್ನು ಒಳಗೊಂಡಿದೆ.ಅವರನ್ನು ಭಕ್ತಿಭಂಡಾರಿ ಎಂದೂ ಕರೆಯುತ್ತಾರೆ (ಅಕ್ಷರಶಃ, ಭಕ್ತಿಯ ಖಜಾಂಚಿ),ಬಸವಣ್ಣ (ಹಿರಿಯ ಸಹೋದರ ಬಸವ) ಅಥವಾ ಬಸವೇಶ್ವರ. ವಿಶೇಷ ಮಾಹಿತಿ:- ಬಸವಣ್ಣನವರನ್ನು "ಕರ್ನಾಟಕದ ಮಾರ್ಟಿನ್ ಲೂಥರ್" ಎಂದು ಕರೆಯುತ್ತಾರೆ. ಹೀಗೆ ಕರೆದವರು "ಸರ್ ಅರ್ಥರ್ ಮೈಲರ್". ಬಾಲ್ಯ ಜೀವನ ಬಸವಣ್ಣನವರು ಮೇ ೩ ರನ್ದು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾರೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಎಂದು ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ. ಬಸವಣ್ಣ ಹನ್ನೆರಡು ವರ್ಷಗಳ ಕಾಲ ಕುಂಡಲಸಂಗಮದಲ್ಲಿ ಅಧ್ಯಯನ ಮಾಡಿದರು . ನಂತರ ಲಕುಲಿಶಾ-ಪಶುಪಾಟ ಸಂಪ್ರದಾಯದ ಒಂದು ಶೈವ ಕಲಿಕೆಯ ಕಲಿಕೆಯಲ್ಲಿ ಸಂಗಮೇಶ್ವರದಲ್ಲಿ ಮುಗಿಸಿದರು. ಬಸವಣ್ಣ ತನ್ನ ತಾಯಿಯ ಕಡೆಯಿಂದ ಸೋದರ ಸಂಬಂಧಿಯನ್ನು ಮದುವೆಯಾದ. ಅವರ ಪತ್ನಿ ಗಂಗಾಂಬಿಕೆ ಕಲಚುರಿ ರಾಜ ಬಿಜ್ಜಳ ಪ್ರಧಾನ ಮಂತ್ರಿಯ ಮಗಳು, ಧಾರ್ಮಿಕ ಬೆಳವಣಿಗೆಗಳು ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು. ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವರಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾಮೋಹ ಹೊಂದುವುದು ಘೋರ ಅಪರಾಧ. ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗ ಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು. ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಎಂದೂ ಕರೆಯಲಾಗುತ್ತದೆ. ಮಾನವಿಯತೆ. ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು. ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ. ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ. ಬೆಳಗಾವಿ ಜಿಲ್ಲೆಯ ಅರ್ಜುನವಾಡದ ಶಿಲಾಶಾಸನದಲ್ಲಿ ಉಲ್ಲೇಖಿತವಾಗಿರುವ ಸಂಗಣಬಸವ ಎಂಬ ಹೆಸರು ವಚನಕಾರ ಬಸವಣ್ಣನವರದ್ದೇ ಎಂದು ವಿದ್ವಾಂಸರು ಊಹಿಸಿದ್ದಾರೆ. ಸಾಮಾಜಿಕ ಸಮಾನತೆ ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ ಇವ ನಮ್ಮವ ಇವ ನಮ್ಮವ ಇವ ನಮ್ಮವ ನೆಂದೆನಿಸಯ್ಯಾ ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ. ಶೂದ್ರರಾದ ರೈತಾಪಿ ಜನರು, ಕಾಯಕಜೀವಿಗಳು, ಮಹಿಳೆಯರು ಮತ್ತು ಪಂಚಮರು ಈ ದೇಶದಲ್ಲಿ ಸಹಸ್ರಾರು ವರ್ಷಗಳಿಂದ ಮನುಧರ್ಮದ ಪುರುಷ ಪ್ರಧಾನವಾದ ವರ್ಣ ವ್ಯವಸ್ಥೆಯಿಂದಾಗಿ ಪಡಬಾರದ ಕಷ್ಟಪಟ್ಟಿದ್ದಾರೆ. ಮೇಲ್ವರ್ಗ ಮತ್ತು ಮೇಲ್ಜಾತಿಯ ಅನುತ್ಪಾದಕ ಪುರುಷರಿಗಾಗಿಯೇ ಬದುಕಿನ ಎಲ್ಲ ಸುಖಭೋಗಗಳು ಮೀಸಲಾಗಿದ್ದವು. ಇವರು ಮಾತ್ರ ಜನಿವಾರ ಧರಿಸುವ ಹಕ್ಕನ್ನು ಪಡೆದಿದ್ದರು. ಜನಿವಾರ ಧರಿಸುವ ಬ್ರಾಹಣ ಓದಿರಬಹುದು, ಬರೆದಿರಬಹುದು ಆದರೆ ಕಾಯಕಜೀವಿಯಾಗಿ ಉತ್ಪಾದನೆಯಲ್ಲಿ ತೊಡಗಿಲ್ಲ. ಉತ್ಪಾದನೆಯ ಅನುಭವದಿಂದ ಬರುವ ಜ್ಞಾನವನ್ನು ಹಿಂದಿನ ಕಾಲದಲ್ಲಿ ಅವನೆಂದೂ ಪಡೆಯಲಿಲ್ಲ. ಕ್ಷತ್ರಿಯ ನಾಗಿರಬಹುದು ಆದರೆ ಉತ್ಪಾದನೆಯಲ್ಲಿ ತೊಡಗಲಿಲ್ಲ. ವೈಶ್ಯ ವಸ್ತುಗಳ ಮಾರಾಟ ಮಾಡಿರಬಹುದು, ಕೃಷಿಭೂಮಿಯ ಒಡೆಯನೂ ಆಗಿರಬಹುದು ಆದರೆ ಸ್ವತಃ ಉತ್ಪಾದನೆ ಮಾಡಲಿಲ್ಲ. ಈ ಮೂರೂ ವರ್ಣದವರಿಗೂ ಜನಿವಾರ ಇದೆ. ಆದರೆ ಉತ್ಪಾದನೆಯಲ್ಲಿ ಕಾಯಕ ಜೀವಿಗಳಿಗೆ ಮತ್ತು ಪಂಚಮರಿಗೆ ಜನಿವಾರ ಇಲ್ಲ. ಯಾರಿಗೆ ಜನಿವಾರ ಇತ್ತೋ ಅವರು ದುಡಿಯದೆ ಸುಖ ಜೀವನವನ್ನು ಅನುಭವಿಸಿದರು. ಯಾರಿಗೆ ಜನಿವಾರ ಇದ್ದಿದ್ದಿಲ್ಲವೂ ಅವರು ದುಡಿದೂ ಕಷ್ಟ ಜೀವನವನ್ನು ಅನುಭವಿಸಿದರು. ಅಂತೆಯೆ ಬಸವಣ್ಣನವರು ಕಟ್ಟ ಕಡೆಗೆ ಮನುಷ್ಯನ ಕಡೆಗೆ ಬಂದರು ಈ ಅನ್ಯಾಯದ ವಿರುದ್ಧ ಸಿಡಿದೆದ್ದರು. "ಜಾತಿ ಸಂಕರವಾದ ಬಳಿಕ ಕುಲವನರಸುವರೆ ?" ಎಂದು ಪ್ರಶ್ನಿಸಿ ಕಾಯಕಜೀವಿಗಳ ಕೇಂದ್ರಿತ ಶರಣ ಸಂಕುಲವನ್ನು ಸೃಷ್ಟಿಸಿದರು. ವಿವಿಧ ಕಾಯಕಗಳ ಶೂದ್ರರಿಗೆ, ಮಹಿಳೆಯರಿಗೆ ಮತ್ತು ಪಂಚಮರಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವ ವ್ಯವಸ್ಥೆ ಮಾಡಿದರು. ಅವರೆಲ್ಲ ಅನುಭವ ಮಂಟಪದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಭಾರತದಲ್ಲಿ ವಿವಿಧ ಜಾತಿಗಳ ಕಾಯಕಜೀವಿಗಳು ಮೊದಲ ಬಾರಿಗೆ ಜಾತಿಯನ್ನು ಮೀರಿ ಒಂದು ವರ್ಗವಾಗಿದ್ದು ಶರಣ ಸಂಕುಲದಲ್ಲಿ ಎಂಬುದು ಹೆಮ್ಮೆಯ ವಿಚಾರವಾಗಿದೆ. ಅವರೆಲ್ಲ ತಮ್ಮ ಕಾಯಕಗಳ ಹೆಸರುಗಳನ್ನು ಅಭಿಮಾನದಿಂದ ಉಳಿಸಿಕೊಂಡರು. ಆದರೆ ಆ ಕಾಯಕಗಳ ಒಳಗೆ ಇದ್ದ ಜಾತಿ ವಿಷವನ್ನು ಹೊರ ಹಾಕಿದರು. ಹೀಗೆ ಶರಣರಲ್ಲಿ ಸಮಗಾರ, ಮಾದಾರ, ಮೇದಾರ, ಡೋಹರ, ಅಂಬಿಗ ಮುಂತಾದ ಪದಗಳು ಜಾತಿ ಸೂತಕವನ್ನು ಕಳೆದುಕೊಂಡು ಕಾಯಕ ಸೂಚಕಗಳಾಗಿ ಉಳಿದವು. ಸಂಕ್ಷಿಪ್ತ ಪರಿಚಯ ವಿಶ್ವಗುರು ಬಸವಣ್ಣನವರು ಪರಮಾತ್ಮನ ಕರುಣೆಯ ಕಂದರಾಗಿ ಅವತರಿಸಿ, ಲೋಕಕ್ಕೆ ಹೊಸ ಧರ್ಮವೊಂದನ್ನು ಕೊಟ್ಟರು. ಇಂಗಳೇಶ್ವರ ಬಾಗೇ ವಾಡಿಯಲ್ಲಿ ಶೈವ ಬ್ರಾಹ್ಮಣ ದಂಪತಿಗಳಾದ ಮಾದರಸ-ಮಾದಲಾಂಬಿಕೆಯರ ಮಗನಾಗಿ ಆನಂದನಾಮ ಸಂವತ್ಸರದಲ್ಲಿ ವೈಶಾಖಮಾಸದ ಅಕ್ಷಯ ತೃತೀಯದಂದು (ದಿ. ಎಪ್ರಿಲ್ ೩೦ ೧೧೩೪) ರೋಹಿಣಿ ನಕ್ಷತ್ರದಲ್ಲಿ ಜನಿಸಿದರು. ಇವರು ಯಾವುದೇ ಅಂಧಶ್ರದ್ಧೆ ಜಡ ಸಂಪ್ರದಾಯಗಳನ್ನೊಪ್ಪದ ಸತ್ಯಾನ್ವೇಷಕರಾಗಿ ಹೆತ್ತವರನ್ನು, ಬಂಧು ಬಾಂಧವರನ್ನು ತೊರೆದು ವಿದ್ಯಾಕಾಂಕ್ಷಿಯಾಗಿ ಕೂಡಲ ಸಂಗಮದ ಗುರುಕುಲಕ್ಕೆ ಬಂದರು. ಶಾಸ್ತ್ರಾಧ್ಯಯನ, ಯೋಗಾಭ್ಯಾಸಗಳಲ್ಲಿ ಬಾಲ್ಯವನ್ನು ಕಳೆದು ತಾರುಣ್ಯಕ್ಕೆ ಕಾಲಿರಿಸಿದರು. ಜನರಲ್ಲಿ ಮನೆ ಮಾಡಿಕೊಂಡಿದ್ದ ಮೌಢ್ಯತೆ, ಕಂದಾಚಾರ, ಜಾತೀಯತೆಗಳನ್ನು ಕಂಡು ಮನನೊಂದು ಪರಿಹಾರವನ್ನು ಅರಸತೊಡಗಿದರು. ಒಂದು ದಿನ (ದಿ. ೧೪ನೇ ಜನವರಿ ೧೧೫೫) ಪರಮಾತ್ಮನ ದಿವ್ಯ ದರ್ಶನವಾಯಿತು; ಅನುಗ್ರಹಿತರಾದರು. ಬ್ರಹ್ಮ-ವಿಷ್ಣು-ಮಹೇಶ್ವರರೆಂಬ ತ್ರಿಮೂರ್ತಿಗಳನ್ನು ಮೀರಿದ ಸೃಷ್ಟಿಕರ್ತನೇ ಶ್ರೇಷ್ಠವೆಂದು ಘೋಷಿಸಿ ಆ ದೇವನನ್ನು ಲಿಂಗದೇವ ಎಂದು ಕರೆದರು. ನಿರಾಕಾರ ದೇವನಿಗೆ ಮನುಷ್ಯರ, ಪ್ರಾಣಿಗಳ ಆಕಾರ ಕೊಡುವುದು ಸರಿಯಲ್ಲ ಎಂಬ ಭಾವ ತಳೆದು, ದೇವನ ಸಾಕಾರ ಕೃತಿಯೇ ಬ್ರಹ್ಮಾಂಡ, ಇದು ಗೋಲಾಕಾರದಲ್ಲಿದೆ. ಆದ್ದರಿಂದ ಲಿಂಗದೇವನನ್ನು ವಿಶ್ವದಾಕಾರದಲ್ಲಿ ಪೂಜಿಸುವುದು ಸರಿ ಎಂದು ಇಷ್ಟಲಿಂಗದ ಪರಿಕಲ್ಪನೆ ಕೊಟ್ಟರು. ದೇವರ ಕುರುಹಾದ ಇಷ್ಟಲಿಂಗವು ಮಾನವನ ಜಾತಿ, ವರ್ಣ, ವರ್ಗ ಭೇದಗಳನ್ನು ಕಳೆದು ಶರಣನನ್ನಾಗಿ ಮಾಡುವ ಸಾಧನವಾಗಬೇಕೆಂದು ಅದನ್ನು ಗಣ ಲಾಂಛನವನ್ನಾಗಿ ಮಾಡಿದರು. ಪರಮಾತ್ಮನ ದಿವ್ಯಾನುಭವ ಪಡೆದು, ನವ ಸಮಾಜ ನಿರ್ಮಾಣದ ರೂಪುರೇಷೆಗಳನ್ನು ತಮ್ಮ ಮನದಲ್ಲಿ ಹೊಂದಿ ಕಲ್ಯಾಣದ ಕಾರ್ಯಕ್ಷೇತ್ರವನ್ನು ಪ್ರವೇಶಿಸಿದರು. ಸೋದರ ಮಾವನ ಮಗಳು ನೀಲಾ೦ಬಿಕೆಯನ್ನು ವಿವಾಹವಾಗಿ ಕರಣಿಕ ಕಾಯಕ ಕೈಗೊಂಡರು. ಅಲ್ಲಿಂದ ಮುಂದೆ ಭಂಡಾರಿಯಾಗಿ, ಪ್ರಧಾನಿ(ದಂಡನಾಯಕ)ಯಾಗಿ ಕಾಯಕ ನಿರ್ವಹಿಸಿದರು. ಅನುಭವ ಮಂಟಪ ಸ್ಥಾಪಿಸಿ ಧರ್ಮ ಪ್ರಚಾರ ಮಾಡಿದರು. ಎಲ್ಲರ ಮನೆ, ಮನಗಳ ಬಾಗಿಲಿಗೂ ಧರ್ಮಗಂಗೆ ಹರಿಯುವಂತೆ ಮಾಡಿದರು. ಇಷ್ಟಲಿಂಗವೆಂಬ ಗಣಲಾಂಛನವನ್ನು ಧರಿಸಿ ಲಿಂಗಾಯತರಾದ ಎಲ್ಲ ಶರಣ ಬಂಧುಗಳನ್ನು ಸಮಾನ ಭಾವದಿಂದ ಕಂಡರು. ಹುಟ್ಟಿನಿಂದ ಬ್ರಾಹ್ಮಣರಾಗಿ, ಸಂಸ್ಕಾರದಿಂದ ಶರಣರಾದ ಮಧುವರಸರ ಮಗಳನ್ನು ಹುಟ್ಟಿನಿಂದ ಸಮಗಾರರಾಗಿ ಸಂಸ್ಕಾರದಿಂದ ಶರಣರಾದ ಹರಳಯ್ಯನವರ ಮಗನಿಗೆ ಕೊಟ್ಟು ವಿವಾಹ ಮಾಡಲು ಪ್ರೇರಣೆ ನೀಡಿದರು. ಈ ವಿವಾಹದಿಂದ ಸಂಪ್ರದಾಯವಾದಿಗಳು ಸಿಡಿದೆದ್ದು ಬಿಜ್ಜಳ ಮಹಾರಾಜನನ್ನು ಬಸವಣ್ಣನವರ ವಿರುದ್ದ ಪ್ರೇರೇಪಿಸಿ ಧರ್ಮಗುರು ಬಸವಣ್ಣನವರಿಗೆ ಗಡಿಪಾರು ಶಿಕ್ಷೆ ನೀಡುವಂತೆ ಮಾಡಿದರು. ಧರ್ಮಪಿತರು ಗಡಿಪಾರು ಶಿಕ್ಷೆ ಸ್ವೀಕರಿಸಿ ಕಲ್ಯಾಣದಿಂದ ಹೊರಟ ನಂತರ ಹರಳಯ್ಯ, ಮಧುವರಸ, ಶೀಲವಂತರ ಬಂಧನವಾಗಿ ಅವರು ವರ್ಣಾಂತರ ವಿವಾಹದಲ್ಲಿ ಭಾಗಿಯಾದುದ ಕ್ಕಾಗಿ ಕಣ್ಣು ಕೀಳಿಸುವ ಶಿಕ್ಷೆ, ಎಳೆ ಹೊಟ್ಟೆ ಶಿಕ್ಷೆಗೆ ಒಳಗಾಗಿ ಪ್ರಾಣ ಬಿಡಬೇಕಾಯಿತು. ಜಾತಿವಾದಿಗಳು ವಚನ ಸಾಹಿತ್ಯವನ್ನು ನಾಶ ಮಾಡಲು ಸನ್ನದ್ಧರಾದಾಗ, ವೀರಮಾತೆ ಅಕ್ಕನಾಗಲಾಂಬಿಕೆ, ಚಿನ್ಮಯಜ್ಞಾನಿ ಚೆನ್ನಬಸವಣ್ಣ, ವೀರ ಗಣಾಚಾರಿ ಮಡಿವಾಳ ಮಾಚಯ್ಯನವರು ವೀರಾಗ್ರಣಿಗಳಾಗಿ ಕಾದಾಡಿ ವಚನ ವಾಙ್ಮಯ ನಿಧಿಯನ್ನು ಉಳಿಸಿಕೊಟ್ಟರು. ಅದಿಂದು ನಮ್ಮೆಲ್ಲರ, ಕರ್ನಾಟಕದ, ಭಾರತದ, ವಿಶ್ವದ ಹೆಮ್ಮೆಯ ಆಸ್ತಿಯಾಗಿದೆ. ಇಂತಹ ಮಹಾನ್ ನೇತಾರರಾದ ಬಸವಣ್ಣನವರು ಲಿಂಗಾಯತ ಧರ್ಮದ ಸಂಸ್ಥಾಪಕರು; ಧರ್ಮಪಿತರು, ಮಂತ್ರಪುರುಷರು. ೬೨ ವರ್ಷ ೩ ತಿಂಗಳು ೨ ದಿವಸಗಳ ಕಾಲ ಇಳೆಯಲ್ಲಿ ಬಾಳಿದ ಬಸವಣ್ಣನವರು ನಳನಾಮ ಸಂವತ್ಸರದ ಶ್ರಾವಣ ಶುದ್ಧ ಪಂಚಮಿಯಂದು (ದಿ. ಜುಲೈ ೭ ೧೧೯೬) ಉರಿಯುಂಡ ಕರ್ಪುರದಂತೆ ಲಿಂಗೈಕ್ಯರಾದರು. ಮಂಗಳವೇಡದ ರಾಜ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾದ ಬಸವಣ್ಣ ಹಲವಾರು ಜನಪರ ಮತ್ತು ಸಮಾಜ ಸುಧಾರಣೆ ಕ್ರಮಗಳನ್ನು ಕೈಗೊಂಡರು. ಕಾಯಕವೇ ಕೈಲಾಸ ವೆಂದು ಸಾರಿ, ಜನರನ್ನು ದುಡಿದು ಬದುಕುವ ಪಥದಲ್ಲಿ ಮುನ್ನೆಡೆಸಿದರು. ಜಾತಿ, ಲಿಂಗ, ಭಾಷೆ ಭೇದವಿಲ್ಲದೆ, ಶರಣ ತತ್ವದಲ್ಲಿ, ಸಮಾನತೆಯಲ್ಲಿ ಮತ್ತು ಕಾಯಕ ನಿಷ್ಠೆಯಲ್ಲಿ ನಂಬಿಕೆಯುಳ್ಳವರನ್ನು ನಿಜವಾದ " ಶಿವಶರಣ " ರೆಂದು ಕರೆದರು. ದಂಪತಿಗಳನ್ನು ಮತ್ತು ನವ ವಧುವರಾರಾದ ಶೀಲವಂತ-ಲಾವಣ್ಯರನ್ನು ಆನೆಯ ಕಾಲಿಗೆ ಕಟ್ಟಿಸಿ, ಊರ ತುಂಬಾ ನೆಲದ ಮೇಲೆ ಎಳೆಸಿ ಕೊಲ್ಲುವ ಕ್ರೂರವಾದ ಎಳೆಹೂಟೆ ಶಿಕ್ಷೆಗೆ ಗುರಿಪಡಿಸಿ, ಕೊಲ್ಲುತ್ತಾನೆ. ಬಿಜ್ಜಳನ ಸೇನೆ ಶಿವಶರಣರನ್ನು ಕಂಡಲ್ಲಿ ಕೊಲ್ಲ ತೊಡಗಿ, ರಕ್ತದ ಹೊಳೆ ಹರಿಸುತ್ತದೆ. ಬಸವಣ್ಣನವರು ೧೧೯೬ ರಲ್ಲಿ ಕೂಡಲಸಂಗಮಕ್ಕೆ ಮರಳಿ ಅಲ್ಲೇ ಲಿಂಗೈಕ್ಯರಾದರು. ಅವರ ಸಮಾಧಿಯು ಅಲ್ಲಿಯೇ ಇದೆ. ಅವರ ಸಮಾಧಿಯನ್ನು ಕರ್ನಾಟಕ ಸರಕಾರದಿಂದ ಬಸವ ಸಾಗರ ಹಿನ್ನಿರಿನಲ್ಲಿ ಮುಳಗದಂತೆ ರಕ್ಷಿಸಿಲ್ಪಟ್ಟಿದೆ. ಬಸವಣ್ಣನವರ ಕಾಯಕದ ಮಹತ್ವ ಮತ್ತು ಕಾಯಕ ಸಮಾನತೆ "ದೇವ ಸಹಿತ ಮನೆಗೆ ಬಂದಡೆ ಕಾಯಕವಾವುದೆಂದು ಬೆಸಗೊಂಡಡೆ ನಿಮ್ಮಾಣೆ, ನಿಮ್ಮ ಪುರಾತರಾಣೆ! ತಲೆದಂಡ! ತಲೆದಂಡ! ತಲೆದಂಡ! ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಿಸಿದಡೆ ನಿಮ್ಮ ರಾಣಿವಾಸದಾಣೆ." ಹೀಗೆ ಬಸವಣ್ಣನವರು ಭಕ್ತರಲ್ಲಿ ಸರ್ವಸಮಾನತೆಯನ್ನು ಕಾಣುತ್ತಾರೆ. ಶರಣರ ದೃಷ್ಟಿಯಲ್ಲಿ ಯಾವ ಕಾಯಕವೂ ಚಿಕ್ಕದಲ್ಲ ಅಥವಾ ದೊಡ್ಡದಲ್ಲ. "ಮನೆ ನೋಡಾ ಬಡವರು, ಮನ ನೋಡಾ ಘನ ಸೋಂಕಿನಲ್ಲಿ ಶುಚಿ; ಸರ್ವಾಂಗ ಕಲಿಗಳು. ಪಸರಕ್ಕನುವಿಲ್ಲ; ಬಂದ ತತ್ಕಾಲಕ್ಕೆ ಉಂಟು. ಕೂಡಲಸಂಗನ ಶರಣರು ಸ್ವತಂತ್ರ ಧೀರರು." ಎಂದು ಬಸವಣ್ಣನವರು ಕಾಯಕಜೀವಿಗಳಾದ ಆಯ್ದಕ್ಕಿ ಲಕ್ಕಮ್ಮ ಮತ್ತು ಮಾರಯ್ಯನವರ ವ್ಯಕ್ತಿತ್ವವನ್ನು ಕುರಿತು ಕಣ್ಣಿಗೆ ಕಟ್ಟುವಂತೆ ಹೇಳಿದ್ದಾರೆ. ಅವರು ಘನಮನದವರೂ ಪರಿಶುದ್ಧ ರೂ ಸ್ವತಂತ್ರ ಧೀರರೂ ಆಗಿದ್ದಾರೆ. "ಮನಶುದ್ಧವಿಲ್ಲದವಂಗೆ ದ್ರವ್ಯದ ಬಡತನವಲ್ಲದೆ ಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿ ಸದ್ಭಕ್ತಂಗೆ ಎತ್ತ ನೋಡಿದತ್ತ ಲಕ್ಷ್ಮಿ ತಾನಾಗಿಪ್ಪಳು ಮಾರಯ್ಯಪ್ರಿಯ ಅಮರೇಶ್ವರ ಲಿಂಗದ ಸೇವೆಯುಳ್ಳನ್ನಕ್ಕರ" ಎಂದು ಆಯ್ದಕ್ಕಿ ಲಕ್ಕಮ್ಮ ಕಾಯಕದ ಮಹತ್ವ ವ್ಯಕ್ತಪಡಿಸುತ್ತಾಳೆ. "ಗುರುವಾದರೂ ಕಾಯಕದಿಂದಲೇ ಜೀವನ್ಮುಕ್ತಿ ಲಿಂಗವಾದರೂ ಕಾಯಕದಿಂದಲೇ ಶಿಲೆಯ ಕುಲ ಹರಿವುದು ಜಂಗಮವಾದರೂ ಕಾಯಕದಿಂದಲೇ ವೇಷ ಪಾಶ ಹರಿವುದು ಇದು ಚೆನ್ನಬಸವಣ್ಣಪ್ರಿಯ ಚಂದೇಶ್ವರ ಲಿಂಗದ ಅರಿವು" ಎಂದು ನುಲಿಯ ಚಂದಯ್ಯನವರು ಕಾಯಕದ ಮಹತ್ವವನ್ನು ಸಾರಿದ್ದಾರೆ. ಗುರು-ಲಿಂಗ-ಜಂಗಮಕ್ಕೆ ಕಾಯಕವೇ ಆಧಾರವಾಗಿದೆ ಎಂದು ಮನ ತುಂಬುಗುವಂತೆ ಹೇಳಿದ್ದಾರೆ. "ಕಾಯಕದಲ್ಲಿ ನಿರತನಾದಡೆ ಗುರುದರ್ಶನವಾದರೂ ಮರೆಯಬೇಕು ಲಿಂಗಪೂಜೆಯಾದರೂ ಮರೆಯಬೇಕು ಜಂಗಮ ಮುಂದೆ ನಿಂದಿದ್ದರೂ ಹಂಗು ಹರಿಯಬೇಕು ಕಾಯಕವೇ ಕೈಲಾಸವಾದ ಕಾರಣ ಅಮರೇಶ್ವರ ಲಿಂಗವಾಯಿತ್ತಾದರೂ ಕಾಯಕದೊಳಗು." ಎಂದು ಆಯ್ದಕ್ಕಿ ಮಾರಯ್ಯ ಹೇಳುವಲ್ಲಿ ಕಾಯಕದ ಮಹತ್ವ ಪರಾಕಾಷ್ಠೆಯನ್ನು ತಲುಪುತ್ತದೆ. "ಆವ ಕಾಯಕವಾದರೂ ಸ್ವಕಾಯಕವ ಮಾಡಿ ಗುರು ಲಿಂಗ ಜಂಗಮದ ಮುಂದಿಟ್ಟು, ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು ವ್ಯಾಧಿ ಬಂದಡೆ ನರಳು, ಬೇನೆ ಬಂದಡೆ ಒರಲು, ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ, ಭಾಪು ಲದ್ದೆಯ ಸೋಮಾ." ಹುಲ್ಲಿನ ಹೊರೆ ಹೊರುವ ಕಾಯಕದ ಸೋಮಯ್ಯ ಬದುಕೆಂಬುದು ಜೈವಿಕ ಪ್ರಕ್ರಿಯೆ ಎಂದು ಹೀಗೆ ಸೂಚಿಸುತ್ತಾನೆ. ಆ ಮೂಲಕ ಸಾವನ್ನು ಗೆಲ್ಲುತ್ತಾನೆ. ದೇವರ ಹಂಗಿಗೆ ಒಳಗಾಗದೆ ದೇವರನ್ನು ಆರಾಧಿಸುವ ಕ್ರಮವನ್ನು ನಮಗೆ ಕಲಿಸಿಕೊಟ್ಟಿದ್ದಾನೆ. ಜನಸಾಮಾನ್ಯರು ಶರಣಸಂಕುಲ ಸೇರಿ ಹೀಗೆ ಆತ್ಮಸ್ಥೈರ್ಯ ಪಡೆದು ಅಸಾಮಾನ್ಯರಾಗುವಲ್ಲಿ ಬಸವಣ್ಣನವರ ಅಪಾರ ಶ್ರಮ ಅಡಗಿದೆ. ಅಂತೆಯೆ ಶರಣರಿಗೆ ಬದುಕೆಂಬುದು ದುಃಖದ ಆಗರವೆಂದು ಅನಿಸುವುದಿಲ್ಲ. ಶರಣರು ಸವಾಲನ್ನು ಎದುರಿಸುತ್ತ ಆನಂದವನ್ನು ಅನುಭವಿಸುವವರು. "ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ ಸತ್ಯಶುದ್ಧವಿಲ್ಲದುದು ಕಾಯಕವಲ್ಲ ಆಸೆಯೆಂಬುದು ಭವದ ಬೀಜ ನಿರಾಸೆಯೆಂಬುದು ನಿತ್ಯಮುಕ್ತಿ ಉರಿಲಿಂಗಪೆದ್ದಿಗಳರಸನಲ್ಲಿ ಸದರವಲ್ಲ ಕಾಣವ್ವಾ." ಎಂದು ಉರಿಲಿಂಗಪೆದ್ದಿಗಳ ಮುಣ್ಯಸ್ತ್ರೀ ಕಾಳವ್ವೆ ಹೇಳುತ್ತಾಳೆ. ಕಾಯಕದಲ್ಲಿ ಮುಕ್ತಿ ಕಾಣುವ ಪರಿ ಇದು. ಒಬ್ಬ ದಲಿತ ಮಹಿಳೆ ಶರಣಸಂಕುಲದೊಳಗೆ ಬಂದು ಇಷ್ಟೊಂದು ಮಹತ್ತರವಾದ ವಿಚಾರವನ್ನೊಳಗೊಂಡ ವಚನರಚನೆ ಮಾಡಿದ್ದಾಳೆಂದರೆ ಬಸವಣ್ಣನವರು ಜಗತ್ತಿನಲ್ಲಿ ಮೊದಲಬಾರಿಗೆ ಯಾವ ರೀತಿ ವಯಸ್ಕರ ಶಿಕ್ಷಣದ ವ್ಯವಸ್ಥೆ ಮಾಡಿರಬಹುದು ಎಂಬುದರ ಕುರಿತು ಸಂಶೋಧನೆಯಾಗಬೇಕಿದೆ. ಶರಣರ ವಚನಗಳು ಮತ್ತು ತತ್ತ್ವ ಕೂಡ ಕಾಯಕದ ಉತ್ಪತ್ತಿಯಾಗಿವೆ ಎಂಬುದನ್ನು ಮರೆಯಬಾರದು. ವಚನಗಳು ಅನನ್ಯವಾಗಿರುವುದು ಇದೇ ಕಾರಣದಿಂದ. ಅನೇಕ ವಚನಕಾರರು ತಮ್ಮ ಕಾಯಕಗಳ ಅನುಭದ ಮೂಲಕವೇ ಅನುಭವಿಯಾಗಿದ್ದಾರೆ. ಅವರ ವಚನಗಳಲ್ಲಿನ ಪ್ರತಿಮೆ, ಪ್ರತೀಕ ಮತ್ತು ಸಂಕೇತಗಳು ಅವರವರ ಕಾಯಕಗಳ ಅನುಭವದ ಮೂಲಕವೇ ಸೃಷ್ಟಿಯಾಗಿವೆ. ಕಾಯಕದ ವಸ್ತುಗಳು ಹೀಗೆ ಕಾವ್ಯ ಪ್ರತಿಮೆಗಳಾಗುತ್ತಲೇ ತತ್ತ್ವವನ್ನು ಸ್ಫುರಿಸತೊಡಗುತ್ತವೆ. ಬಸವಣ್ಣನವರ ಅಂಚೆ ಚೀಟಿ ಮತ್ತು ನಾಣ್ಯ ೧೧ನೇ ಮೇ ೧೯೬೭ರಂದು, ಗುರು ಬಸವಣ್ಣವರ ೮೦೦ನೇಯ ಲಿಂಗೈಕ್ಯ ದಿನಾಚರಣೆ ನಿಮಿತ್ತ ಭಾರತ ಸರಕಾರದ ಅಂಚೆ ಇಲಾಖೆಯು, ೧೫ ಪೈಸೆ ಮುಖ ಬೆಲೆಯುಳ್ಳ ಅಂಚೆ ಚೀಟಿ ಯನ್ನು ಮುದ್ರಿಸಿತು.ref>https://lingayatreligion.com/GuruBasava/Basava_On_Stamp</ref> ೧೯೯೭ರಲ್ಲಿ ೨ ರೂಪಾಯಿ ಮುಖ ಬೆಲೆಯುಳ್ಳ ಅಂಚೆ ಚೀಟಿಯನ್ನು, ಅಂಚೆ ಇಲಾಖೆಯು ಮತ್ತೆ ಮುದ್ರಿಸಿತು. ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳನ್ನು ಡಾ. ಮನಮೋಹನ ಸಿಂಗ್ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಬಸವಣ್ಣನವರು ನಾಣ್ಯದ ಮೇಲೆ ಪ್ರಕಟಿಸಲ್ಪಟ್ಟವರಲ್ಲಿ ಪ್ರಥಮ ಕನ್ನಡಿಗ ರಾಗಿದ್ದಾರೆ. ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ್ ನಲ್ಲಿ ೨೮ನೇ ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯತು. ವಚನಗಳು ಚಿತ್ರಗಳು ಉಲ್ಲೇಖಗಳು ಬಾಹ್ಯ ಸಂಪರ್ಕಗಳು ವಿಶ್ವಗುರು ಬಸವಣ್ಣ ವಿಶ್ವಗುರು ಬಸವಣ್ಣ ವಿಶ್ವಗುರು ಬಸವಣ್ಣ ವಿಶ್ವಗುರು ಬಸವಣ್ಣ ವಿಶ್ವಗುರು ಬಸವಣ್ಣನವರ ಸಂಕ್ಷಿಪ್ತ ಜೀವನ ಚರಿತ್ರೆ ವಿಚಾರಮಂಟಪ.ನೆಟ್ ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು, ಸರ್ವಜ್ಞರ ವಚನಗಳು ಲಿಂಗಾಯತ ಲಿಂಗಾಯತ: ಲಿಂಗಾಯತ ತತ್ತ್ವಶಾಸ್ತ್ರ ವೀರಶೈವ ಮತ ಕನ್ನಡ ಕವಿಗಳು ವಚನಕಾರರು
1194
https://kn.wikipedia.org/wiki/%E0%B2%AC%E0%B2%BF.%20%E0%B2%9C%E0%B2%BF.%20%E0%B2%8E%E0%B2%B2%E0%B3%8D.%20%E0%B2%B8%E0%B3%8D%E0%B2%B5%E0%B2%BE%E0%B2%AE%E0%B2%BF
ಬಿ. ಜಿ. ಎಲ್. ಸ್ವಾಮಿ
ಡಾ. ಬಿ. ಜಿ. ಎಲ್. ಸ್ವಾಮಿ (ಬೆಂಗಳೂರು ಗುಂಡಪ್ಪ ಲಕ್ಷ್ಮೀನಾರಾಯಣ ಸ್ವಾಮಿ) ಕರ್ನಾಟಕದ ಹಿರಿಯ ವಿಜ್ಞಾನಿ ಮತ್ತು ಸಾಹಿತಿ. ಹಿರಿಯ ವಿದ್ವಾಂಸ, ಚಿಂತನಶೀಲ ಬರಹಗಾರ. ಜೀವನ 'ಬಿ.ಜಿ.ಎಲ್.ಸ್ವಾಮಿ'ಯವರು ಕನ್ನಡದ ಪ್ರಸಿದ್ಧ ಸಾಹಿತಿ ಡಿ. ವಿ. ಗುಂಡಪ್ಪನವರ ಏಕಮಾತ್ರ ಪುತ್ರರು. ಮನೆಯಲ್ಲಿ ಸಾಹಿತ್ಯ, ಸಂಗೀತ, ಚಿಂತನಶೀಲತೆ ಗಾಳಿಯಲ್ಲೇ ಬೆರೆತುಹೋಗಿದ್ದವು. ಆದರೆ ಹಣಕಾಸಿನ ಸ್ಥಿತಿ ಅಷ್ಟೇನೂ ಚೆನ್ನಾಗಿರಲಿಲ್ಲ. ಸ್ವಾಮಿಗೆ ಐದು ವರ್ಷವಾಗಿದ್ದಾಗ ಅವರ ತಾಯಿ ತೀರಿಕೊಂಡರು. ಬೆಂಗಳೂರಿನ ಸೆಂಟ್ರಲ್ ಕಾಲೇಜ್ ವಿದ್ಯಾರ್ಥಿಯಾಗಿದ್ದಾಗ ಸ್ವಾಮಿ ಕರ್ನಾಟಕ ಸಂಘದ ಕಾರ್ಯದರ್ಶಿಯಾಗಿ ಕೆಲಸ ಮಾಡಿದರು. ೧೯೩೯ರಲ್ಲಿ ಸಸ್ಯ ಶಾಸ್ತ್ರವನ್ನು ಅಧ್ಯಯನ ಮಾಡಿ ಬಿಎಸ್‌ಸಿ (ಆನರ್ಸ್) ಪರೀಕ್ಷೆಯಲ್ಲಿ ಮೊದಲ ತರಗತಿ ಪಡೆದರು. ಮನೆಯನ್ನೇ ಸಂಶೋಧನಾಲಯವನ್ನಾಗಿ ಮಾಡಿಕೊಂಡು ಸಾಧಾರಣವಾದ ಉಪಕರಣಗಳನ್ನು ಬಳಸಿಕೊಂಡು, ಸಂಶೋಧನಾ ಲೇಖನಗಳನ್ನು ಬರೆದರು. ಇವು ಹೊರದೇಶಗಳಲ್ಲೂ ಪ್ರಕಟವಾದವು. ೧೯೪೭ ರಲ್ಲಿ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಡಿ.ಎಸ್ಸಿ ಪದವಿ ಬಂದಿತು. ಅದೇವರ್ಷ ಅಮೆರಿಕದಲ್ಲಿ ವಿಶ್ವವಿಖ್ಯಾತ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಜಗತ್ಪ್ರಸಿದ್ಧ ಸಸ್ಯವಿಜ್ಞಾನಿ ಪ್ರೊಫೆಸರ್ ಇರ್ವಿಂಗ್ ಬೈಲಿಯ ಹತ್ತಿರ ಸಸ್ಯಶಾಸ್ತ್ರ ಅಧ್ಯಯನಕ್ಕೆ ಹೋಗಲು ಭಾರತ ಸರ್ಕಾರದ ನೆರವು ದೊರೆಯಿತು. ಹತ್ತು ತಿಂಗಳ ಅಧ್ಯಯನದ ನಂತರ ಅವರು ಭಾರತಕ್ಕೆ ಹಿಂದಿರುಗಿದಾಗ ಬೈಲಿ, ನನ್ನ ನಲವತ್ತು ವರ್ಷಗಳ ಅನುಭವದಲ್ಲಿ ಪೂರ್ವದೇಶಗಳಿಂದ ಬಂದ ವಿದ್ಯಾರ್ಥಿಗಳಲ್ಲಿ ಅತ್ಯಂತ ಸಮರ್ಥರು ಡಾ. ಸ್ವಾಮಿ' ಎಂದು ಬರೆದರು. ಆವರೆಗೆ ಆತ ಯಾರ ಹೆಸರನ್ನೂ ತನ್ನ ಸಂಶೋಧನೆಗಳೊಂದಿಗೆ ಸೇರಿಸಿರಲಿಲ್ಲ, ಆದರೆ ಸ್ವಾಮಿಯ ಹೆಸರನ್ನು ಸೇರಿಸಿದರು. ಮುಂದೆ ಇವರು ಮದ್ರಾಸಿನ (ಈಗಿನ ಚೆನ್ನೈ) ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ, ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದರು. ಡಾ.ಸ್ವಾಮಿಯವರ ಸಂಶೋಧನೆಗಳು ಸಸ್ಯದ ಬೇರಿಗೂ ಕಾಂಡಕ್ಕೂ ಜೋಡಣೆಯ ಭಾಗವನ್ನು ಕುರಿತು ಒಂದು ನೂರು ವರ್ಷ ಎಲ್ಲ ಸಸ್ಯ ವಿಜ್ಞಾನಿಗಳೂ ಒಪ್ಪಿಕೊಂಡಿದ್ದ ಸಿದ್ಧಾಂತವೂ ಸ್ವಾಮಿಯವರ ಸಂಶೋಧನೆಯಿಂದ ತಲೆಕೆಳಗಾಯಿತು. ಇಂತಹ ಹಲವುಗ್ಗ ಎಂದು ಮಾತ್ರ ಕಾಣಸಿಗುವ ಅಪೂರ್ವ ಸಸ್ಯ ಇದು. ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಗುರು ಸ್ಥಾನದಲ್ಲಿಯೂ ಪಿತೃಸ್ಥಾನದಲ್ಲಿಯೂ ಇದ್ದ ಪ್ರೊ. ಇರವಿಂಗ್ ಡಬ್ಲ್ಯೂ ಬೈಲಿ ಯವರ ಗೌರವಾರ್ಥ ಈ ಗಿಡದ ಹೆಸರಿನಲ್ಲಿ ಅವರ ಹೆಸರು ಅಡಕಗೊಳಿಸಿದ್ದಾರೆ. ೧೯೫೦ರಲ್ಲಿ ಸ್ವಾಮಿ ಭಾರತಕ್ಕೆ ಹಿಂದಿರುಗಿದರು. ೧೯೫೩ರಲ್ಲಿ ಮದರಾಸಿನ ಪ್ರೆಸಿಡೆಸ್ಸಿ ಕಾಲೇಜಿನಲ್ಲಿ ಪ್ರಾಧಾಪಕರಾಗಿ ಇಪ್ಪತ್ತೈದು ವರ್ಷ ಕಾಲ ಅಲ್ಲಿ ಕೆಲಸ ಮಾಡಿದರು. ಸಸ್ಯ ಶಾಸ್ತ್ರದಲ್ಲಿ ಸಂಶೋಧನೆಯನ್ನು ಮುಂದುವರೆಸಿ ಅಮೆರಿಕ, ರಷ್ಯ ಮೊದಲಾದ ದೇಶಗಳಲ್ಲೂ ಕೀರ್ತಿ ಪಡೆದರು. ಮೂರು ವರ್ಷ ಪ್ರಿನ್ಸಿಪಾಲರಾಗಿದ್ದರು. ನೂರಾರು ಮಂದಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿ ಆದರ್ಶ ಪ್ರಾಧ್ಯಾಪಕ, ಸಂಶೋಧಕ ಎನ್ನಿಸಿಕೊಂಡರು. ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲಸಿದ ಮೇಲೂ ಬಿಡುವು ಇಲ್ಲದೆ ಸಂಶೋಧನೆಯನ್ನು ಕೈಗೊಂಡರು. ೧೯೭೯ರಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂದರ್ಶಕ ಪ್ರಾಧ್ಯಾಪಕರಾಗಿ ಹೋದರು. ಸ್ವಾಮಿ ಅಂತರರಾಷ್ಟ್ರೀಯ ಸಮ್ಮೇಳನಗಳಲ್ಲಿ ವಿಜ್ಞಾನದ ಸಂಶೋಧನೆಗಳನ್ನು ಕುರಿತು ಅತ್ಯಂತ ಪ್ರೌಢವಾದ ಪ್ರಬಂಧಗಳನ್ನು ಮಂಡಿಸಿದ್ದಾರೆ. ಇವೆಲ್ಲಾ ಹಲವಾರು ಪ್ರಸಿದ್ಧ ನಿಯತಕಾಲಿಕೆ ಹಾಗೂ ಪತ್ರಿಕೆಗಳಲ್ಲಿ ದಾಖಲಾಗಿವೆ. 'Proccedings of the National Institute of Sciences, Journal of the Bombay Natural history Society, ಇತ್ಯಾದಿಗಳಲ್ಲಿ ಪ್ರಕಟವಾದವು. ಅವುಗಳ ವಿಷಯಗಳು: Annals of Botony-ನಿಯಿತಕಾಲಿಕದಲ್ಲಿ ಪ್ರಕಟಿಸಲ್ಪಟ್ಟಿದೆ. Endosperm in Hypericum mysorensis Homologies of embryosacs in Angiosperms. Inverted Polarity of Embryosacs in Angiosperms and its relation to the Archegoniate theory. Botanical Gazzette-ನಿಯಿತಕಾಲಿಕದಲ್ಲಿ ಪ್ರಕಟಿಸಲ್ಪಟ್ಟಿದೆ. Embryosac and Fertilization in Cypripedium spectabilis. New Phylologist-ನಿಯತಕಾಲಿಕದಲ್ಲಿ ಪ್ರಕಟಿಸಲ್ಪಟ್ಟಿದೆ. Embryosac of Zexuine sulcata. ನಿಭಾಯಿಸಿದ ಪ್ರಮುಖ ಹುದ್ದೆಗಳು ಸ್ವಾಮಿಯವರು ಆಗಿನ ಕಾಲದ, ಭಾರತದ ಪ್ರಮುಖ ವಿಜ್ಞಾನಿಗಳಲ್ಲಿ ಒಬ್ಬರು. ೧೯೭೬ರಲ್ಲಿ ಅವರಿಗೆ ಬೀರಬಲ್ ಸಾಹನಿ ಸುವರ್ಣಪದಕ ದ ಗೌರವ ಲಭಿಸಿತು. ೧೯೭೪ರಲ್ಲಿ ರಷ್ಯದ 'ಲೆನಿನ್‌ಗ್ರಾಡ್‌ನ ಅಂತರಾಷ್ಟ್ರೀಯ ಸಸ್ಯವಿಜ್ಞಾನ ಸಮ್ಮೇಳನ'ದ ಉಪಾಧ್ಯಕ್ಷರು. ಹಾರ್ವರ್ಡ್ ವಿಶ್ವವಿದ್ಯಾನಿಲಯದ `ಅಸೋಸಿಯೇಟ್ ಪ್ರೊಫೆಸರ್'. ಸಾಹಿತ್ಯ ಹಾಗೂ ಬಹುಮುಖಿ ವ್ಯಕ್ತಿತ್ವ ಅವರ ಆಸಕ್ತಿ ವಿಜ್ಞಾನಕ್ಕೇ ಸೀಮಿತವಾಗಿರಲಿಲ್ಲ. ಸಂಗೀತ, ಚಿತ್ರಕಲೆಗಳಲ್ಲಿ ಆಳವಾದ ಪರಿಶ್ರಮ. ಸ್ವತಃ ಚಿತ್ರಗಳನ್ನು ಬರೆಯುತ್ತಿದ್ದರು. ಅವರ `ಹಸುರು ಹೊನ್ನು' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿತು. ಈ ಪುಸ್ತಕದ ವಿನೋದ ಚಿತ್ರಗಳನ್ನು ಅವರೇ ಬರೆದರು. ಕನ್ನಡ ಸಾಹಿತ್ಯ ಪರಿಷತ್ತಿನ ವಾರಪತ್ರಿಕೆ, ಕನ್ನಡನುಡಿ, ಯಲ್ಲಿ ವಿಜ್ಞಾನಲೇಖನ. ವಿಜ್ಞಾನ ವಿಹಾರ, ಶೀರ್ಷಿಕೆಯಡಿಯಲ್ಲಿ, ದಾಖಲಾಗಿರುವ, ೪ ಲೇಖನಗಳು ಇಲ್ಲಿ ಉದ್ಧರಿಸಲು ಯೋಗ್ಯವಾಗಿವೆ. 'ಪ್ರಣಯ ಪ್ರಸಂಗ' (ಕನ್ನಡ ನುಡಿ, ಸೆಪ್ಟೆಂಬರ್ ೯, ೧೯೪೧) 'ಪ್ಲಾಟಿಪಸ್' (ಕನ್ನಡ ನುಡಿ, ಅಕ್ಟೋಬರ್, ೩, ೧೯೪೧) 'ಜೇಡನ ಚರಕ' (ಕನ್ನಡ ನುಡಿ, ಅಕ್ಟೋಬರ್ ೩೧, ೧೯೪೧) 'ಹಸಿವಿನ ಬಳ್ಳಿ' (ಕನ್ನಡ ನುಡಿ, ನವೆಂಬರ್, ೨೮, ೧೯೪೧)@ ವಿಜ್ಞಾನಿಯಾಗಿ ಅವರ ಸಂಶೋಧನೆಯ ಸಾಕಷ್ಟು ಭಾಗ ಸಾಹಿತ್ಯ, ಸಂಸ್ಕೃತಗಳೊಂದಿಗೆ ಸಂಬಂಧವಿದ್ದದ್ದು, ಉದಾಹರಣೆಗೆ, ಉಪನಿಷತ್ತುಗಳಲ್ಲಿ ಪ್ರಸ್ತಾಪವಾದ ಸಸ್ಯಗಳು, ಕನ್ನಡ ಕವಿಗಳು ವರ್ಣಿಸಿರುವ ಸಸ್ಯಗಳು ಇವನ್ನು ಅಧ್ಯಯನ ಮಾಡುತ್ತಿದ್ದರು. `[ಹಸುರು ಹೊನ್ನು]' ಪುಸ್ತಕದುದ್ದಕ್ಕೂ ಅವರು ಪ್ರಸ್ತಾಪಿಸಿದ ಮರಗಿಡಗಳು ಹಣ್ಣು ಹೂಗಳನ್ನು ಬೇರೆ ಬೇರೆ ಭಾಷೆಗಳ ಸಾಹಿತ್ಯಗಳಲ್ಲಿ ಕವಿಗಳು ಹೇಗೆ ವರ್ಣಿಸಿದ್ದಾರೆ ಎಂದು ಪ್ರಸ್ತಾಪಿಸಿದ್ದಾರೆ. ಕನ್ನಡದಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಮತ್ತು ಅವರ ಬದುಕಿಗೆ ಸಂಬಂಧಿಸಿದಂತೆ ವೈಜ್ಞಾನಿಕ ವಿಷಯಗಳನ್ನು ತಿಳಿಸಿಕೊಟ್ಟರು. `ಹಸುರು ಹೊನ್ನು' ಇಂಥ ಪುಸ್ತಕ. ಇದಲ್ಲದೆ ನಮ್ಮ ಹೊಟ್ಟೆಯಲ್ಲಿ ದಕ್ಷಿಣ ಅಮೆರಿಕ'ದಲ್ಲಿ ತುಂಬ ಸ್ವಾರಸ್ಯವಾಗಿ ಆ ದೇಶದಿಂದ ಬಂದ ಸಸ್ಯಗಳನ್ನು ಕುರಿತು ಬರೆದಿದ್ದಾರೆ. `ಸಾಕ್ಷಾತ್ಕಾರದ ದಾರಿಯಲ್ಲಿ' ವೀಳ್ಯದೆಲೆ,ಅಡಿಕೆ, ಆಫೀಮು ಮೊದಲಾದವುಗಳ ಬಳಕೆಯನ್ನು ಕುರಿತ ಸ್ವಾರಸ್ಯವಾದ ಪುಸ್ತಕ. `ಕಾಲೇಜು ರಂಗ', `ಪ್ರಾಧ್ಯಾಪಕನ ಪೀಠದಲ್ಲಿ', `ತಮಿಳು ತಲೆಗಳ ನಡುವೆ' ಮೊದಲಾದ ಪುಸ್ತಕಗಳಲ್ಲಿ ಪ್ರಾಧ್ಯಾಪಕರಾಗಿ ಅವರ ಅನುಭವಗಳನ್ನು ನಿರೂಪಿಸಿದ್ದಾರೆ. ವಸ್ತು ದೃಷ್ಟಿಯೆರಡೂ ಗಂಭೀರ, ಅದರಲ್ಲಿ ಹಾಸ್ಯ ಹಾಸುಹೊಕ್ಕಾಗಿದೆ. `ಕಾಲೇಜು ರಂಗ' ಪುಟ್ಟಣ್ಣ ಕಣಗಾಲ್ ನಿರ್ದೇಶನದಲ್ಲಿ ಚಲನಚಿತ್ರವೂ ಆಯಿತು. ಸ್ವಾಮಿಯವರ ತಂದೆ ಡಿ. ವಿ. ಗುಂಡಪ್ಪನವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿತು. ಸ್ವಾಮಿಗೂ ಇದು ಸಂದಿತು; ತಂದೆ ಮಕ್ಕಳಿಬ್ಬರೂ ಪ್ರಶಸ್ತಿಯನ್ನು ಪಡೆದ೦ತಾದದ್ದು ಅದೇ ಭಾರತದಲ್ಲಿ ಪ್ರಥಮ ಬಾರಿ. ಅಸಾಧಾರಣ ಜ್ಞಾನದ ಹಸಿವು, ಅಸಾಧಾರಣ ಪ್ರತಿಭೆ, ಶಿಷ್ಯರಿಗೆ ಮಾರ್ಗದರ್ಶನ ಮಾಡುವುದರಲ್ಲಿ ಅಸಾಧಾರಣ ಶ್ರದ್ಧೆ, ಆಸಕ್ತಿಗಳ ವ್ಯಾಪ್ತಿಯೂ ಅಸಾಧಾರಣ. ಹಲವು ರೀತಿಗಳಲ್ಲಿ ಬಿ. ಜಿ. ಎಲ್. ಸ್ವಾಮಿ ಅಸಾಧಾರಣ ವ್ಯಕ್ತಿ. ಡಾ| ಬಿ. ಜಿ. ಎಲ್. ಸ್ವಾಮಿ ಅವರ ಬಗ್ಗೆ ಡಾ| ಹಾ. ಮಾ. ನಾಯಕರ ಅನಿಸಿಕೆ: "ಬಿ. ಜಿ. ಎಲ್. ಸ್ವಾಮಿಯವರ ಕ್ಷೇತ್ರ ಸಸ್ಯಶಾಸ್ತ್ರವಾಗಿದ್ದರೂ, ವಿಜ್ಞಾನ ಬೋಧನೆ ಅವರ ವೃತ್ತಿಯಾಗಿದ್ದರೂ, ಅವರೊಬ್ಬ ಗದ್ಯ ಲೇಖಕರಾಗಿದ್ದರೂ, ಅವರಲ್ಲೊಬ್ಬ ನಿಜವಾದ ಕವಿಯಿದ್ದ" ಎಂಬುದನ್ನು ಅವರನ್ನು ಓದುವ ಯಾರೇ ಆದರೂ ಕಂಡುಕೊಳ್ಳಬಹುದು. ಅವರೊಡನೆ ಮಾತನಾಡುತ್ತಿರುವಾಗಂತೂ ಇದು ಸ್ಪಷ್ಟವಾಗಿ ಅನುಭವಕ್ಕೆ ಬರುತ್ತಿತ್ತು. ಅವರ ವರ್ಣನೆಗಳು, ಅವರ ವ್ಯಕ್ತಿ ಚಿತ್ರಗಳು, ಅವರ ನಿರೂಪಣೆ, ಶೈಲಿ - ಇವೆಲ್ಲ ಇದನ್ನು ದೃಢಪಡಿಸುತ್ತವೆ. ಒಟ್ಟಿನಲ್ಲಿ ಅವರ ಯಾವುದೇ ಬರಹವಾದರೂ ಓದುಗರಿಗೆ ಸಾಹಿತ್ಯದ ಅನುಭವವನ್ನು ಕೊಡುತ್ತದೆ ಎಂಬುದು ಮುಖ್ಯವಾದ ಮಾತು. ತಮ್ಮ ಪ್ರಸಿದ್ಧವಾದ 'ಹಸುರು ಹೊನ್ನು' ಪುಸ್ತಕದಲ್ಲಿ ಸ್ವಾಮಿಯವರು ಮಾಡಿಕೊಡುವ ಗಿಡಮರಗಳ ಪರಿಚಯ ಅನ್ಯಾದೃಶವಾದ ರೀತಿಯಿಂದಲೇ ಸಸ್ಯಶಾಸ್ತ್ರ ಸಾಹಿತ್ಯವಾಗಿ ಮಾರ್ಪಟ್ಟಿದೆ. ವ್ಯಂಗ್ಯ, ವಿಡಂಬನೆ ಹಾಗೂ ತಿಳಿಯಾದ ಹಾಸ್ಯ ಇವುಗಳ ಚೌಕಟ್ಟಿನಲ್ಲಿ ಲೇಖಕರು ಒಂದು ವಾತಾವರಣವನ್ನು ಸೃಷ್ಟಿಸುತ್ತಾರೆ. ಈ ಸೃಷ್ಟಿಯಲ್ಲಿ ಕವಿ, ಕಥೆಗಾರ, ವ್ಯಕ್ತಿ ಚಿತ್ರಕಾರ ಮತ್ತು ಪ್ರಬಂಧಕಾರ ಇವರೆಲ್ಲ ಸೇರಿಕೊಳ್ಳುತ್ತಾರೆ. ಫಲವಾಗಿ ಸಸ್ಯಶಾಸ್ತ್ರ ಬುದ್ಧಿಯ ಬಲವನ್ನು ಅವಲಂಬಿಸದೆ ಹೃದಯದ ಮಾಧುರ್ಯಕ್ಕೆ ಒಲಿಯುತ್ತದೆ". ಅವರ ಸಂಶೋದನೆಗಳೆಲ್ಲಾ ಕ್ಲಾಸಿಕಲ್ ರಿಸರ್ಚ್ ಆದ ಅಂಗರಚನಾಶಾಸ್ತ್ರ', 'ಹೊರರಚನಾಶಾಸ್ತ್ರ','ವರ್ಗೀಕರಣಶಾಸ್ತ್ರ', 'ಭ್ರೂಣವಿಜ್ಞಾನಕ್ಕೆ ಸೀಮಿತವಾಗಿವೆ. ಆಧುನಿಕ ವಿಭಾಗಗಳಾದ,'Cytology', 'Genetics', 'Plant Phisiology',ಶಾಸ್ತ್ರಗಳಲ್ಲಿ ಅವರು ಹೆಚ್ಚಿನ ಆಸಕ್ತಿತೋರಿಸಲು ಸಾಧ್ಯವಾಗಲಿಲ್ಲ. ಕಾರಣವಿಷ್ಟೆ. ತಮಗೆ ಮನೆಯಲ್ಲಿ ಸಿಕ್ಕ ಅನುಕೂಲತೆಗಳು ಕಷ್ಟಸಾಧ್ಯವಾದ್ದರಿಂದ, ಸಾಧ್ಯವಾದ್ದಷ್ಟರಲ್ಲೇ, ಸಿಕ್ಕಿದ್ದಷ್ಟರಲ್ಲೇ, ಉನ್ನತ ಸಂಶೋಧನೆಮಾಡಿದರು. ಕೃತಿಗಳು ಸಾಕ್ಷಾತ್ಕಾರದ ಹಾದಿಯಲ್ಲಿ ಸಸ್ಯಪುರಾಣ ತಮಿಳು ತಲೆಗಳ ನಡುವೆ ಕಾಲೇಜು ರಂಗ ಕಾಲೇಜು ತರಂಗ ಪಂಚಕಲಶಗೋಪುರ ಹಸುರು ಹೊನ್ನು ಅಮೇರಿಕಾದಲ್ಲಿ ನಾನು ನಮ್ಮ ಹೊಟ್ಟೆಯಲ್ಲಿ ದಕ್ಷಿಣ ಅಮೇರಿಕ ಪ್ರಾಧ್ಯಾಪಕನ ಪೀಠದಲ್ಲಿ ದೌರ್ಗಂಧಿಕಾಪಹರಣ ಮೈಸೂರು ಡೈರಿ ಬೆಳದಿಂಗಳಲ್ಲಿ ಅರಳಿದ ಮೊಲ್ಲೆ (ತಮಿಳು ಮೂಲ: ಉ.ವೇ.ಸ್ವಾಮಿನಾಥ ಅಯ್ಯರ್) ಜ್ಞಾನರಥ (ತಮಿಳು ಮೂಲ: ಸುಬ್ರಹ್ಮಣ್ಯ ಭಾರತಿ) ಬೃಹದಾರಣ್ಯಕ ಫಲಶ್ರುತಿ ಶಾಸನಗಳಲ್ಲಿ ಗಿಡಮರಗಳು ಸಸ್ಯಜೀವಿ ಪ್ರಾಣಿಜೀವಿ ಮೀನಾಕ್ಷಿಯ ಸೌಗಂಧ ನಡೆದಿಹೆ ಬಾಳೌ ಕಾವೇರಿ (ಅನು.) ಪ್ರಶಸ್ತಿ ಗೌರವಗಳು ಸಸ್ಯಕ್ಷೇತ್ರದ ಕೊಡುಗೆಗಾಗಿ ಭಾರತ ಸರ್ಕಾರದಿಂದ 'ಬೀರ್ಬಲ್ ಸಾಹ್ನಿ ಸ್ವರ್ಣ ಪದಕ' ಹಸುರುಹೊನ್ನು ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ - ೧೯೭೮(1978) ನಿಧನ ಬಿ. ಜಿ. ಎಲ್. ಸ್ವಾಮಿ ೧೯೮೦ರ ನವೆಂಬರ್ ೨ರಂದು ಇಹ ಜಗತ್ತನ್ನು ತ್ಯಜಿಸಿದರು. ಹೆಚ್ಚಿನ ಓದು ‘ಸ್ವಾಮಿಯಾನ’ ಪುಸ್ತಕದಲ್ಲಿ ಹಲವಾರು ಕ್ಷೇತ್ರದ ಗಣ್ಯರು ಸ್ವಾಮಿಯವರ ಬಗ್ಗೆ ಬರೆದ ಲೇಖನಗಳಿವೆ. ಉಲ್ಲೇಖಗಳು ಹೊರಸಂಪರ್ಕಗಳು ಡಾ. ಬಿ.ಜಿ.ಎಲ್. ಸ್ವಾಮಿ, nammakannadanaadu.com ಸ್ಮರಣೆ - ಬಿ.ಜಿ.ಎಲ್. ಸ್ವಾಮಿ- ಕನ್ನಡ ಸಾಹಿತ್ಯ ಪರಿಷತ್ತು ಡಾ. ಬಿ.ಜಿ.ಎಲ್. ಸ್ವಾಮಿ - ಕಣಜ ಅಂತರಜಾಲ ಜ್ಞಾನಕೋಶ ಕನ್ನಡ ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ೧೯೧೮ ಜನನ ೧೯೮೦ ನಿಧನ ವಿಜ್ಞಾನ ಸಾಹಿತಿಗಳು